ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ನಿಧನ
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಇಂದು (ಶುಕ್ರವಾರ) ನಿಧನರಾಗಿದ್ದಾರೆ. ಇವರ ಸಾವಿಗೆ ವಿವಿಧ ಪಕ್ಷದ ನಾಯಕ ಸಂತಾಪ ಸೂಚಿಸಿದ್ದಾರೆ.
ಲಖನೌ, (ಆ.21): ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಸಾದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜನ್ಮೇಜಯ್ ಸಿಂಗ್ (75) ಅವರು ಇಂದು (ಶುಕ್ರವಾರ) ನಿಧನರಾಗಿದ್ದಾರೆ.
ಗುರುವಾರ ರಾತ್ರಿ ಶಾಸಕ ಜನ್ಮೇಜಯ್ ಸಿಂಗ್ ಅವರರನ್ನ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನ ಲಖನೌದ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಿಜೆಪಿ ಮಾಜಿ ಶಾಸಕ ಸಿ. ಗುರುಸ್ವಾಮಿ ಕೊರೋನಾಗೆ ಬಲಿ!
ಜನಮೇಜಯ್ ಸಿಂಗ್ ಸಾವಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿಧಾನಸಭಾ ಸ್ಪೀಕರ್ ಹೃದಯ್ ನಾರಾಯಣ್ ದೀಕ್ಷಿತ್ ಸೇರಿದಂತೆ ಕಾಂಗ್ರೆಸ್, ಬಿಎಸ್ಪಿ ನಾಯಕರು ಸಂತಾಪ ಸೂಚಿಸಿದ್ದಾರೆ.