ಮುಖ್ಯಮಂತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಮಾಜಿ ಸಚಿವರನ್ನ ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಡೆಹ್ರಾಡೂನ್, (ನ.13)​: ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಪಕ್ಷದ ಮೌಲ್ಯವನ್ನು ಕಡಿಮೆ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಮಾಜಿ ಶಾಸಕನನ್ನು ಉತ್ತರಾಖಂಡ ಬಿಜೆಪಿ ಪಕ್ಷದಿಂದ ವಜಾಗೊಳಿಸಲಾಗಿದೆ.

Add Asianetnews Kannada as a Preferred SourcegooglePreferred

ರಾಜ್ಯದ ಮಾಜಿ ಸಚಿವ, ಹಾಲಿ ಶಾಸಕ ಲಖಿ ರಾಮ್​ ಜೋಶಿ ಅವರು ನವೆಂಬರ್​ 11ರಂದು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಅವರು ಕಪ್ಪು ಹಣ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಅವರ ಮೇಲೆ ಸಿಬಿಐ ತನಿಖೆಗೆ ಹೈ ಕೋರ್ಟ್​ ಆದೇಶಿಸಿದೆ. ಇದರಿಂದಾಗಿ ರಾಜ್ಯದ ಜನರು ಪಕ್ಷದ ಮೇಲಿದ್ದ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಡಿಯೂರಪ್ಪ-ಕುಮಾರಸ್ವಾಮಿ ದಿಢೀರ್ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ

ಇದನ್ನ ಗಂಭೀರವಾಗಿ ಪರಿಗಣಿಸಿದ ಉತ್ತರಾಖಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬನ್ಸಿಧರ್​ ಭಗತ್​ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಖಿ ರಾಮ್​ ಜೋಶಿ ಅವರನ್ನ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಇದು ರಾಜ್ಯದ ಆಂತರಿಕ ವಿಚಾರವಾಗಿದ್ದು, ಈ ಕುರಿತಾಗಿ ರಾಮ್​ ಜೋಶಿ ಅವರು ಮೊದಲು ರಾಜ್ಯದ ನಾಯಕರ ಜತೆ ಚರ್ಚಿಸಬೇಕಿತ್ತು. ಅದರ ಬದಲಾಗಿ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪಕ್ಷದ ಶಿಸ್ತನ್ನು ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿದ್ದೇವೆ ಎಂದು ಬನ್ಸಿಧರ್​ ಭಗತ್​ ಸ್ಪಷ್ಟಪಡಿಸಿದ್ದಾರೆ.