ಸಚಿವ ನಾಗೇಂದ್ರ ಅವರು ಕೇವಲ ಆರೋಪಿಯಾಗಿದ್ದು, ಅಪರಾಧಿಯಲ್ಲ, ಹಾಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬಿಜೆಪಿಯ ಅನೇಕ ನಾಯಕರು ಬೇಲ್ ಮೇಲೆ ಇದ್ದು, ರಾಮಮಂದಿರದ ಹುಂಡಿ ಹಣ ಹೊಡೆದಿದ್ದಾರೆ, ಅವರಿಗೆ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ ಎಂದು ಅವರು ತಿರುಗೇಟು

ಕೊಪ್ಪಳ (ಆ.12): ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಏಕೆ ರಾಜೀನಾಮೆ ನೀಡಬೇಕು. ಅವರೇನು ಅಪರಾಧಿಗಳಲ್ಲ, ಬರಿ ಆರೋಪಿ ಅಷ್ಟೇ ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾಕೆ ಹೋರಾಟ ಮಾಡುತ್ತಾರೆ. ಅವರಲ್ಲಿ ಎಷ್ಟು ನಾಯಕರು ಬೇಲ್ ಮೇಲೆ ಇಲ್ಲ ಎಂದು ಕುಟುಕಿದರು.

ಬಿಜೆಪಿ ಮಾಡೋದೆಲ್ಲ ಒಳ್ಳೆಯದು, ಕಾಂಗ್ರೆಸ್‌ನವರು ಮಾಡಿದ್ರೆ ಕೆಟ್ಟದ್ದಾ?

ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಈ ಕುರಿತು ಪ್ರಶ್ನೆ ಮಾಡುವ ಅಧಿಕಾರವೇ ಇಲ್ಲ. ಅವರೇ ಯಾವ ಯಾವ ಕೇಸ್‌ನಲ್ಲಿದ್ದಾರೆ ಎನ್ನುವುದು ಗೊತ್ತಿಲ್ಲವೇ, ಅದಿರು ಹಗರಣ ಬಗ್ಗೆ ಜನರಿಗೆ ಗೊತ್ತಿಲ್ಲವೇ ಎಂದರು.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಈಗ ನಾನು ಏಟು ತಿಂದ ಹುಲಿ, ಬಿಜೆಪಿ ಆರೋಪಕ್ಕೆ ಉತ್ತರಿಸುವೆ -ನಾಗೇಂದ್ರ

ಬಿಜೆಪಿಯವರು ತಾವು ಮಾಡಿದ್ದೆಲ್ಲ ಒಳ್ಳೆಯದು, ಕಾಂಗ್ರೆಸ್ ನವರು ಮಾಡಿದರೆ ಕೆಟ್ಟದ್ದಾ? ಬಿಜೆಪಿಯವರು ರಾಮರಾಮ ಎಂದು ರಾಮಮಂದಿರ ನಿರ್ಮಾಣ ಮಾಡಿ ರಾಮನ ಹುಂಡಿ ಹೊಡೆದರಲ್ಲ, ಇದಕ್ಕೆ ಏನು ಹೇಳುತ್ತಾರೆ ಎಂದರು.

ಇದನ್ನೂ ಓದಿ: B Nagendra: ಕೋರ್ಟ್‌ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ: ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?