Asianet Suvarna News Asianet Suvarna News

ಆಪರೇಶನ್ ಡೆಲ್ಲಿ: ಅತೃಪ್ತರು ಒಮ್ಮೆ ಇಲ್ಲಿ ಮತ್ತೊಮ್ಮೆ ಅಲ್ಲಿ!

ಒಂದು ಕಡೆ ಪಕ್ಷದ ನಿರ್ಲಕ್ಷ್ಯ ಹಾಗೂ ಮತ್ತೊಂದು ಕಡೆ ಸಮ್ಮಿಶ್ರ ಸರ್ಕಾರದ ದೋಸ್ತಿಗಳಾದ ಕಾಂಗ್ರೆಸ್-ಜೆಡಿಎಸ್ ನಡುವೆ ನಡೆದಿರುವ ತಿಕ್ಕಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಅತೃಪ್ತರು ಬಿಜೆಪಿಯತ್ತ ಧಾವಿಸುವ ಪ್ರಯತ್ನವನ್ನು ತೀವ್ರಗೊಳಿಸಿದ್ದಾರೆ.

ಬೆಂಗಳೂರು(ಡಿ.30): ಒಂದು ಕಡೆ ಪಕ್ಷದ ನಿರ್ಲಕ್ಷ್ಯ ಹಾಗೂ ಮತ್ತೊಂದು ಕಡೆ ಸಮ್ಮಿಶ್ರ ಸರ್ಕಾರದ ದೋಸ್ತಿಗಳಾದ ಕಾಂಗ್ರೆಸ್-ಜೆಡಿಎಸ್ ನಡುವೆ ನಡೆದಿರುವ ತಿಕ್ಕಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಅತೃಪ್ತರು ಬಿಜೆಪಿಯತ್ತ ಧಾವಿಸುವ ಪ್ರಯತ್ನವನ್ನು ತೀವ್ರಗೊಳಿಸಿದ್ದು, ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನದಿಂದ ಕೊಕ್ ಪಡೆದ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಹಾಗೂ ಶಾಸಕ ವಿ.ನಾಗೇಂದ್ರ ಅವರು ದೆಹಲಿಯಲ್ಲಿ ಶನಿವಾರ ಬಿಜೆಪಿಯ ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದರು ಎಂದು ಹೇಳಲಾಗುತ್ತಿದೆ. ರಾಜ್ಯ ಬಿಜೆಪಿಯ ಈ ಪ್ರಮುಖ ನಾಯಕರು ದೆಹಲಿಯಲ್ಲಿ ಇರುವ ವೇಳೆಯೇ ಕಾಂಗ್ರೆಸ್ ನ ಅತೃಪ್ತರು ದೆಹಲಿಯಲ್ಲಿ ಬೀಡು ಬಿಟ್ಟಿರುವುದು ಕಾಕತಾಳೀಯವೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories