ಎಲ್ಲರಿಗೂ ಮಾತನಾಡಿದಂತೆ ನನಗೆ ಮಾತನಾಡಿದರೆ ನಡೆಯುವುದಿಲ್ಲ. ನಾವು ವಿಜಯಪುರ ಪಕ್ಕಕ್ಕೆ ಸರಿಸಿದ್ದೇವೆ. ಇಲ್ಲಿ ಬಂದು ಮರಳು ಮಾಡುತ್ತಿದ್ದಾನೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳು ಇಲ್ಲವಾ? ಇಲ್ಲಿ ಅವರ ಮಗಳ ಪರ ಪ್ರಚಾರ ಮಾಡಿ ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾನೆ ಎಂದು ಏಕವಚನದಲ್ಲಿ ಹರಿಹಾಯ್ದ ಬಸನಗೌಡ ಪಾಟೀಲ್ ಯತ್ನಾಳ್‌ 

ಸಾವಳಗಿ(ಏ.16): 2029ರ ಲೋಕಸಭೆ ಚುಣಾವಣೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ನೀನು ನನ್ನ ವಿರುದ್ಧ ಸ್ಪರ್ಧಿಸಲು ತಯಾರಾಗು. ಒಮ್ಮೆ ತಾಕತ್ತು ನೋಡೋಣ ಎಂದು ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸವಾಲೆಸೆದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಮಾತನಾಡಿದಂತೆ ನನಗೆ ಮಾತನಾಡಿದರೆ ನಡೆಯುವುದಿಲ್ಲ. ನಾವು ವಿಜಯಪುರ ಪಕ್ಕಕ್ಕೆ ಸರಿಸಿದ್ದೇವೆ. ಇಲ್ಲಿ ಬಂದು ಮರಳು ಮಾಡುತ್ತಿದ್ದಾನೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳು ಇಲ್ಲವಾ? ಇಲ್ಲಿ ಅವರ ಮಗಳ ಪರ ಪ್ರಚಾರ ಮಾಡಿ ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾನೆ ಎಂದು ಏಕವಚನದಲ್ಲಿ ಹರಿಹಾಯ್ದರು.

ಯತ್ನಾಳ್ ಗಂಡಸ್ತನಕ್ಕೆ ಸವಾಲ್‌ ಹಾಕಿದ ಸಚಿವ ಶಿವಾನಂದ ಪಾಟೀಲ..!

ಡಿಸಿಸಿ ಬ್ಯಾಂಕ್, ಸಕ್ಕರೆ ಕಾರ್ಖಾನೆ, ಎಪಿಎಂಸಿ ಸೇರಿದಂತೆ ಪ್ರತಿಯೊಂದರಲ್ಲಿಯೂ ಕೈ ಹಾಕುತ್ತಾನೆ. ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಎಚ್ಚರದಿಂದ ಇರಬೇಕು. 2.5 ಸಾವಿರ ಟನ್ ಕಾರ್ಖಾನೆಗೆ ₹50 ಲಕ್ಷ, 5 ಸಾವಿರ ಟನ್ ಕಾರ್ಖಾನೆಗೆ ಒಂದು ಕೋಟಿ ಹಣವನ್ನು ಚುನಾವಣೆಗೆ ಬೇಡುತ್ತಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ನೌಕರಿ ತುಂಬಿಕೊಳ್ಳಲು ₹15-20ಲಕ್ಷ ಲಂಚ ತೆಗೆದುಕೊಳ್ಳುತ್ತಾರೆ. ರೈತರ ಹೆಸರಿನಲ್ಲಿ ಜಿರೋ ಬಡ್ಡಿಯಲ್ಲಿ ಕೋಟ್ಯಂತರ ಸಾಲ ತೆಗೆದು ಮನ್ನಾ ಮಾಡಿಸಿ ಮೋಸ ಮಾಡುವುದು, ನಂತರ ಇದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಎನ್ನುತ್ತಾರೆ. ಕಳ್ಳತನ ಮಾಡಿದವರು ಯಾರಾದರು ಕಳ್ಳತನ ಮಾಡಿರುವುದನ್ನು ಹೇಳುತ್ತಾರಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಸಂಸದೆಯಾಗಿಲ್ಲ. ಈಗಲೇ ಪ್ರಧಾನಿಯಾಗುತ್ತೇನೆ ಎನ್ನುತ್ತಾರೆ. ಇವರು ಪ್ರಧಾನಿಯಾದರೆ ರಾಹುಲ್ ಗಾಂಧಿ ಇವರ ಮನೆಯ ಗಾರ್ಡನ್‌ಗೆ ನೀರು ಹೊಡಿಬೇಕಾ? ಪ್ರಿಯಾಂಕಾ ಗಾಂಧಿ ಇವರ ಮನೆಯಲ್ಲಿ ಅಡುಗೆ ಮಾಡಬೇಕಾ? ಎಂದು ಯತ್ನಾಳ ವ್ಯಂಗ್ಯವಾಡಿದರು.

ಅಂಬೇಡ್ಕರ್‌ ದೇಶದ ದೊಡ್ಡ ಆಸ್ತಿ. ಅವರ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಜಾಗ ನೀಡಲಿಲ್ಲ. ಈ ದೇಶದ ಗಾಳಿ ನೀರು ಬಳಸಿ ವಿಧಾನಸೌಧದಲ್ಲಿ ಪಾಕಿಸ್ತಾನದ ಬಗ್ಗೆ ಜೈಕಾರ ಹಾಕುತ್ತಾರೆ. ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ದೇಶದ ಪ್ರಣಾಳಿಕೆಯಂತಿದೆ. ರಾಮಮಂದಿರ ಉದ್ಘಾಟನೆಗೆ ಬಾರದ ಕಾಂಗ್ರೆಸ್ ನಾಯಕರು ರಂಜಾನ್‌ಗೆ ಕರೆಯದೆ ಹೋಗಿ ಟೋಪಿ ಹಾಕುತ್ತಾರೆ. ಅಷ್ಟು ನಾಚಿಕೆ ಬಿಟ್ಟಿದ್ದಾರೆ. ಇಲ್ಲಿನ ಮಾಜಿ ಶಾಸಕ ಆನಂದ ನ್ಯಾಮಗೌಡ ಮುಸ್ಲಿಮರ ಬೆನ್ನು ಹತ್ತಿ ಸೋತರು. ಅವರ ಬೆನ್ನು ಹತ್ತಿದರೆ ಹಿಂದೂಗಳು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.