ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ: ಬಿ.ಎಸ್‌.ಯಡಿಯೂರಪ್ಪ 

ಶಿಕಾರಿಪುರ(ಮೇ.11): ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Add Asianetnews Kannada as a Preferred SourcegooglePreferred

ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ ಅಂತ ತಿಳಿಸಿದ್ದಾರೆ. 

ಕಾಂಗ್ರೆಸ್‌ ದ್ವೇಷ ಸೃಷ್ಟಿ​ಸು​ತ್ತಿದೆ, ಎಚ್ಚ​ರಿಕೆ ಇರ​ಲಿ: ​ಹರತಾಳು ಹಾ​ಲಪ್ಪ

ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.