Asianet Suvarna News Asianet Suvarna News

ಲಕ್ಷ್ಮಣ ಸವದಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಜಿಲ್ಲೆಗೆ ಸುಮಾರು ₹ 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

We have fulfilled our promise to Laxman Savadi Says CM Siddaramaiah gvd
Author
First Published Mar 7, 2024, 12:27 PM IST

ಅಥಣಿ (ಮಾ.07): ಜಿಲ್ಲೆಗೆ ಸುಮಾರು ₹ 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುವುದರ ಜತೆಗೆ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಕೂಡ ಆಗುತ್ತದೆ ಎಂದು ತಿಳಿಸಿದರು.

ಕೇಂದ್ರದ ಸರ್ಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸಹಕಾರ ನೀಡುತ್ತಿಲ್ಲ. ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೇ ಒಬ್ಬ ಸಂಸದ ಸಂಸತ್ತನಲ್ಲಿ ಧ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೇ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಓಟಿಗೆ ಏನು ಗೌರವ ಬಂತು ?.

ರಾಜ್ಯದಲ್ಲಿ ಎನ್‌ಇಪಿ ಜಾರಿ ಮಾಡುವುದಿಲ್ಲ: ಸಚಿವ ಮಧು ಬಂಗಾರಪ್ಪ

ಬಿಜೆಪಿ ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಓಟಿಗೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ ಎಂದರು. ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ ಬಿಜೆಪಿ ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ 

ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಿ ಎಂದು ಮನವಿ ಮಾಡಿದರು. ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದರು.

ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ: ಸಚಿವ ದಿನೇಶ್‌ ಗುಂಡೂರಾವ್

ಈ ಕಾರ್ಯಕ್ರಮದಲ್ಲಿ ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದರು. ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಪಟ್ಟಣ, ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಜಿಪಂ ಸಿಇಒ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow Us:
Download App:
  • android
  • ios