ಕೆಲ ಪ್ರಮುಖ ಮೈತ್ರಿಪಕ್ಷಗಳು ತಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾತ್ರ ಮೈತ್ರಿಯಲ್ಲಿ ಉಳಿದುಕೊಳ್ಳುವ ನಿಲುವು ತಾಳಿದವು. ಈ ಎಲ್ಲಾ ಕಾರಣಗಳಿಂದ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸಂಘಟಿತ ಹೋರಾಟ ನಡೆಸಲು ಇಂಡಿಯಾ ಕೂಟಕ್ಕೆ ಸಾಧ್ಯವಾಗಲಿಲ್ಲ. ಅದರಿಂದಾಗಿ ಮ್ಯಾಜಿಕ್‌ ಸಂಖ್ಯೆಯ ಹತ್ತಿರಕ್ಕೆ ಬಂದು ಇಂಡಿಯಾ ಕೂಟ ಎಡವಿದೆ.

ನವದೆಹಲಿ(ಜೂ.05): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸಲು ಈ ಬಾರಿಯ ಲೋಕಸಭೆ ಚುನಾವಣೆಗೂ ಮುನ್ನ ರಚನೆಯಾದ ‘ಇಂಡಿಯಾ’ ಮೈತ್ರಿಕೂಟ ಸ್ವಲ್ಪದರಲ್ಲೇ ಬಹುಮತದಿಂದ ವಂಚಿತವಾಗಿದೆ. ಕೆಲ ಲೋಪಗಳನ್ನು ಆರಂಭದಲ್ಲೇ ಸರಿಪಡಿಸಿಕೊಂಡಿದ್ದರೆ ಎನ್‌ಡಿಎ ಮೈತ್ರಿಕೂಟವನ್ನೇ ‘ಇಂಡಿಯಾ’ ಕೂಟ ಸೋಲಿಸಬಹುದಿತ್ತು ಎಂಬ ವಿಶ್ಲೇಷಣೆಗಳು ಕೇಳಿಬಂದಿವೆ.

Add Asianetnews Kannada as a Preferred SourcegooglePreferred

ಪ್ರಮುಖವಾಗಿ, ಇಂಡಿಯಾ ಮೈತ್ರಿಕೂಟದ ರಚನೆಯಲ್ಲೇ ಗೊಂದಲಗಳಿದ್ದವು. ಅದಕ್ಕೆ ನಾಯಕ ಯಾರು ಎಂಬುದು ಸ್ಪಷ್ಟವಿರಲಿಲ್ಲ. ಹೀಗಾಗಿ ನಾಯಕತ್ವಕ್ಕಾಗಿ ಕಾಂಗ್ರೆಸ್‌, ಜೆಡಿಯು, ಟಿಎಂಸಿ, ಎನ್‌ಸಿಪಿ, ಡಿಎಂಕೆ, ಆಪ್‌ ಮುಂತಾದ ಸಾಕಷ್ಟು ಪಕ್ಷಗಳು ಒಳಗೊಳಗೇ ಪ್ರಯತ್ನ ನಡೆಸಿದ್ದವು. ಆ ಒಡಕು ಕ್ರಮೇಣ ದೊಡ್ಡದಾಗಿ, ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹೊರಹೋಗಿ ಎನ್‌ಡಿಎ ಸೇರಿಕೊಂಡಿತು. ಟಿಎಂಸಿಯ ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಹೊರನಡೆದರು. ಹೀಗಾಗಿ ಸೀಟು ಹಂಚಿಕೆಯಲ್ಲಿ ಗೊಂದಲವಾಯಿತು. 

ಲೋಕಸಭೆ ಚುನಾವಣೆ ಫಲಿತಾಂಶ 2024: ಫೀನಿಕ್ಸ್‌ ಹಕ್ಕಿಯಂತೆ ಎದ್ದು ಬಂದ ಕಾಂಗ್ರೆಸ್‌..!

ಕೆಲ ಪ್ರಮುಖ ಮೈತ್ರಿಪಕ್ಷಗಳು ತಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾತ್ರ ಮೈತ್ರಿಯಲ್ಲಿ ಉಳಿದುಕೊಳ್ಳುವ ನಿಲುವು ತಾಳಿದವು. ಈ ಎಲ್ಲಾ ಕಾರಣಗಳಿಂದ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸಂಘಟಿತ ಹೋರಾಟ ನಡೆಸಲು ಇಂಡಿಯಾ ಕೂಟಕ್ಕೆ ಸಾಧ್ಯವಾಗಲಿಲ್ಲ. ಅದರಿಂದಾಗಿ ಮ್ಯಾಜಿಕ್‌ ಸಂಖ್ಯೆಯ ಹತ್ತಿರಕ್ಕೆ ಬಂದು ಇಂಡಿಯಾ ಕೂಟ ಎಡವಿದೆ.