ಯಾರಾದರೂ ಕಾಂಗ್ರೆಸ್ ಬರುವವರಿದ್ದರೆ ಅರ್ಜಿ ಸಲ್ಲಿಸಲಿ,   ವಲಸೆ ಬಂದ ಸಚವರನ್ನು ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿ

ಮಂಗಳೂರು (ಜು.24): ಯಾರಾದರೂ ಕಾಂಗ್ರೆಸ್ ಬರುವವರಿದ್ದರೆ ಅರ್ಜಿ ಸಲ್ಲಿಸಲಿ, ಆ ಮೇಲೆ ಕೂತು ಮಾತನಾಡೋಣ - ಹೀಗೆಂದು ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ವಲಸೆ ಬಂದ ಸಚವರನ್ನು ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಶುಕ್ರವಾತ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಬರಲು ಇಷ್ಟಪಡುವವರು ಬಹಳಷ್ಟು ಜನ ಇದ್ದಾರೆ. ಅವರ ಹೆಸರು ಹೇಳುವುದಿಲ್ಲ ಎಂದರು. 

ಸಿಎಂ ಕೂಗು ನಿಲ್ಲಿಸಿ: ಡಿಕೆಶಿ, ಸಿದ್ದುಗೆ ರಾಹುಲ್‌ ವಾರ್ನಿಂಗ್!

ನಾನು ಬಹಳ ಹಿಂದೆಯೇ ಈ ಬಗ್ಗೆ ಜು. 26 ರಂದು ಮಾತನಾಡುವ ಎಂದು ಹೇಳಿದ್ದೆ. ಬಿಜೆಪಿಗೆ ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗುವುದಿಲ್ಲ ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಎಂಜಿ ಸರ್ಕಾರ ಇದ್ದರೂ ಒಳ್ಳೆಯ ಆಡಳಿತ ನೀಡಲು ಆಗಿಲ್ಲ. 

ಈ ಸರ್ಕಾರಕ್ಕೆ ಗೌರವ ಎಲ್ಲಿದೆ ಎಂದು ಅವರು ಪ್ರಶ್ನಿಸಿದರು. ಬಿಜೆಪಿಯಲ್ಲಿ ಎಷ್ಟೇ ಮುಖ್ಯಮಂತ್ರಿ ಬದಲಾವಣೆ ಆದರೂ ಅವರ ಪಕ್ಷದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.