ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ| ಎಂಟು ಬಾರಿ ಶಾಸಕನಾಗಿದ್ದೇನೆ ಹೀಗಾಗಿ ಸಿಎಂ ಆಗಲು ನಾನು ಅರ್ಹ| ಬಿಜೆಪಿಗನ ಹೊಸ ವರಸೆ

ಬೆಂಗಳೂರು[ಡಿ.13]: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ಬಿಜೆಪಿ ಹಿರಿಯ ಶಾಸಕ ಉಮೇಶ್‌ ಕತ್ತಿ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ವರಸೆ ತೆಗೆದಿದ್ದಾರೆ.

Add Asianetnews Kannada as a Preferred SourcegooglePreferred

ಪಕ್ಷ ಹೇಳಿದರೆ ಡಿಸಿಎಂ ಪಟ್ಟಬಿಡಲು ನಾವು ರೆಡಿ!

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂತ್ರಿ ಅಥವಾ ಮುಖ್ಯಮಂತ್ರಿ ಹುದ್ದೆ ಪಡೆಯುತ್ತೇನೆಯೇ ಹೊರತು ಉಪಮುಖ್ಯಮಂತ್ರಿ ಹುದ್ದೆ ಸ್ವೀಕರಿಸುವುದಿಲ್ಲ. ಎಂಟು ಬಾರಿ ಶಾಸಕನಾಗಿದ್ದೇನೆ. ಹೀಗಾಗಿ ಈ ಹಿಂದೆಯೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದ್ದೆ. ಈಗಲೂ, ಮುಂದೆಯೂ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಹೇಳಿದರು.

ಶರತ್‌ ಬಚ್ಚೇಗೌಡ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಭೇಟಿ: ರಾಜಕೀಯದಲ್ಲಿ ಸಂಚಲನ!

ಇನ್ನು ಮಂತ್ರಿ ಆಗಲಿ, ಆಗದೇ ಇರಲಿ ಕ್ಷೇತ್ರದ ಶಾಸಕನಾಗಿ ಮುಂದುವರೆಯುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಅದಕ್ಕಾಗಿ ಯಾರ ಬಳಿಯೂ ಮನವಿ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು.

ಡಿಸೆಂಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ