ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ ರಾಹುಲ್ ಗಾಂಧಿ

ಬೆಂಗಳೂರು(ಜೂ.07): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಕ್ಸ್‌ನಲ್ಲಿ ಬರೆದುಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ದಾಖಲೆಗಳು ಸಿಕ್ಕಿವೆ ಎಂದ ಡಿ.ಕೆ.ಶಿವಕುಮಾರ್‌

ಪರಾಭವಗೊಂಡ ಅಭ್ಯರ್ಥಿಗಳಿಗೂ ಧೈರ್ಯ ತುಂಬಿದ ರಾಹುಲ್ ಗಾಂಧಿ ಅವರು, ನೀವು ಸೋತರೂ ಜನರ ಮಧ್ಯೆ ಇರಬೇಕು ಹಾಗೂ ನಮಗೆ ಮತ ನೀಡದವರ ಹೃದಯ ಗೆಲ್ಲಬೇಕು ಎಂದು ಮಾರ್ಗದರ್ಶನ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.