ಗುರುವಾರವಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಧ್ಯಮಗಳಿಗೆ ಶಿವರಾಮ್‌ ಹೆಬ್ಬಾರ್‌ ಹೇಳಿದ್ದರು. ಅದರ ಬೆನ್ನಲ್ಲೇ ಶುಕ್ರವಾರ ನಗರಕ್ಕೆ ಆಗಮಿಸಿದ ಹೆಬ್ಬಾರ್‌ ಅವರು ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

ಬೆಂಗಳೂರು(ಆ.26): ಘರ್‌ವಾಪ್ಸಿ ಕೋಲಾಹಲದ ನಡುವೆಯೇ ಶುಕ್ರವಾರ ತಡರಾತ್ರಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

Add Asianetnews Kannada as a Preferred SourcegooglePreferred

ಗುರುವಾರವಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಧ್ಯಮಗಳಿಗೆ ಶಿವರಾಮ್‌ ಹೆಬ್ಬಾರ್‌ ಹೇಳಿದ್ದರು. ಅದರ ಬೆನ್ನಲ್ಲೇ ಶುಕ್ರವಾರ ನಗರಕ್ಕೆ ಆಗಮಿಸಿದ ಹೆಬ್ಬಾರ್‌ ಅವರು ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

ನಾವು ಬಿಜೆಪಿ ಬಿಡೋದಿಲ್ಲ: ಎಸ್‌ಟಿಎಸ್‌, ಹೆಬ್ಬಾರ್‌, ಬೈರತಿ

ಹೆಬ್ಬಾರ್‌ ಅವರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ ಎಂದು ಅವರ ಆಪ್ತ ಬಳಗ ಹೇಳುತ್ತದೆ. ಆದರೆ, ಹೆಬ್ಬಾರ್‌ ಅವರು ನಡೆಸಿದ ಈ ತಡರಾತ್ರಿ ಭೇಟಿಯು ಘರ್‌ ವಾಪ್ಸಿಯ ಮುಂದುವರೆದ ಬೆಳವಣಿಗೆ ಎಂದೇ ಮೂಲಗಳು ಹೇಳುತ್ತವೆ.

ಕಾಂಗ್ರೆಸ್‌ ಘರ್‌ ವಾಪ್ಸಿ ಚರ್ಚೆ ತೀವ್ರಗೊಂಡಿರುವ ಈ ಹಂತದಲ್ಲಿ ಬಿಜೆಪಿ ಶಾಸಕರು ಒಬ್ಬೊಬ್ಬರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ವಾರವಷ್ಟೇ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಸಿಎಂ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಶಿವರಾಮ್‌ ಹೆಬ್ಬಾರ್‌ ಅವರು ಎಸ್‌.ಟಿ. ಸೋಮಶೇಖರ್‌ ಮಾದರಿಯಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.