ಕೆಲ ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಅವರ ರಾಜೀನಾಮೆಗೆ ನೈಜ ಕಾರಣ ಏನು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ [ಅ.19]: ಜೆಡಿಎಸ್ ಶಾಸಕರು ಕಾಂಗ್ರೆಸ್ ಮತ್ತು ಬಿಜೆಪಿ ಸೇರುತ್ತಾರೆ ಎಂಬುದೆಲ್ಲ ವದಂತಿ. ಯಾರು ಕೂಡ ಬೇರೆ ಪಕ್ಷಕ್ಕೆ ಹೋಗುವ ಮನಸ್ಥಿತಿಯಲ್ಲಿ ಇಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.
Add Asianetnews Kannada as a Preferred Source

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾ.ರಾ.ಮಹೇಶ್ ಅವರು ತಮ್ಮ ಕ್ಷೇತ್ರದ ಅನುದಾನಗಳನ್ನು ಕಡಿತ ಮಾಡಲಾಗಿದೆ ಎಂಬ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈಗ ರಾಜೀನಾಮೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಪಕ್ಷದ ಯಾವ ಶಾಸಕರು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಸಾ.ರಾ.ಮಹೇಶ್ ಹಿರಿಯ ನಾಯಕರು. ಆದರೆ ಅವರಿಬ್ಬರು ಆ ರೀತಿ ಮಾತನಾಡುವುದು ಬೇಕಾಗಿರಲಿಲ್ಲ. ನಾನು ಸಾ.ರಾ.ಮಹೇಶ್ ಜೊತೆ ಈ ಬಗ್ಗೆ ಮಾತನಾಡಿದ್ದೇನೆ
ವಿಶ್ವನಾಥ್ ರವರು ಹಿರಿಯರಿದ್ದಾರೆ. ನೀವು ಅವರ ಮಾತಿಗೆ ರಿಯಾಕ್ಟ್ ಮಾಡಬೇಡಿ ಎಂದಿದ್ದೇನೆ ಎಂದು ಅನಿತಾ ಹೇಳಿದರು.
