<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 04 Apr 2026 23:20:25 +0530</lastBuildDate>
        <atom:link href="https://kannada.asianetnews.com/rss/bagalkot" rel="self" type="application/rss+xml"/>
        <item>
            <title><![CDATA[ಸಂಸದ ಗೋವಿಂದ ಕಾರಜೋಳ ಹಾಕಿರುವ ಸವಾಲು ಹಾಸ್ಯಾಸ್ಪದ: ಸಚಿವ ಎಂ.ಬಿ.ಪಾಟೀಲ]]></title>
            <link>https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep</link>
            <guid isPermaLink="true">https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep</guid>
            <pubDate>Sat, 04 Apr 2026 00:25:07 +0530</pubDate>
            <description><![CDATA[&lt;p&gt;ಯುಕೆಪಿ ಯೋಜನೆ ಕುರಿತು ಏ.8ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7907669v3sy433fx9m4prw4,imgname-minister-mb-patil-1760165075145.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.04): &lt;/strong&gt;ಯುಕೆಪಿ ಯೋಜನೆ ಕುರಿತು ಏ.8ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ನಿಮಿತ್ತ ಭಗವತಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.&lt;/p&gt;&lt;p&gt;ವಿಧಾನಸಭೆ ಉಪಚುನಾವಣೆ ಪ್ರಚಾರ ಪ್ರಕ್ರಿಯೆ ಏ.7ರಂದು ಸಂಜೆ ಮುಗಿಯುತ್ತದೆ. 8ರಂದು ಸಭೆ ನಡೆಸಲು ಅವಕಾಶವೇ ಇಲ್ಲ ಎಂಬ ಸಾಮಾನ್ಯ ಜ್ಞಾನ ಕಾರಜೋಳ ಅವರಿಗೆ ಇಲ್ಲವೇ? ಕೇವಲ ಪ್ರಚಾರಕ್ಕಾಗಿ, ಉಡಾಫೆಗಾಗಿ ಇಂತಹ ಹೇಳಿಕೆ ನೀಡಿರುವ ಇವರು ಯುಕೆಪಿಗಾಗಿ ಏನು ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.&lt;/p&gt;&lt;h2&gt;&lt;strong&gt;ಬಿಜೆಪಿಯವರ ಕಿಸೆಯಲ್ಲಿ ಬೆಂಕಿ ಪೊಟ್ಟಣ&lt;/strong&gt;&lt;/h2&gt;&lt;p&gt;ಏನೇ ಅಭಿವೃದ್ಧಿ ಕಾರ್ಯ ಮಾಡಿದ್ದರೂ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ. ಬಿಜೆಪಿಯವರಿಗೆ ಮಾತನಾಡಲು ಯಾವ ವಿಷಯವೂ ಇಲ್ಲ. ಬೆಂಕಿ ಪೊಟ್ಟಣ ಕಿಸೆಯಲ್ಲಿ ಇಟ್ಟುಕೊಂಡು ಕಂಡ ಕಂಡಲ್ಲಿ ಜಾತಿ, ಮತ, ದ್ವೇಷದ ಮೂಲಕ ಬೆಂಕಿ ಹಚ್ಚುವ ಇವರು. ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಪ್ರಚಾರಕ್ಕಾಗಿ ಭಾಷಣ ಮಾಡುವ ಇವರು. ಎಲ್ಲ ರಂಗಗಳಲ್ಲಿ ವಿಫಲರಾಗಿದ್ದಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಿದ್ದರು.&lt;/p&gt;&lt;p&gt;ಮೋದಿ ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. 24 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದಾರೆ ತಿಳಿದುಕೊಳ್ಳಿ. ರೈತರ ಸಾಲಮನ್ನಾ ಮಾಡದೇ, ಅಂಬಾನಿ, ಅದಾನಿ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿ ಈ ಧೋರಣೆ ಕಂಡ ಯುವಕರಿಗೆ ಈ ಭರವಸೆಗಳು ಭ್ರಮನಿರಸವಾಗಿದೆ ಎಂದರು. ಕಾಂಗ್ರೆಸ್ ಮುಖಂಡ ಗಿರೀಶ ನಾಡಗೌಡ ಕೆರಕಲಮಟ್ಟಿ ಮಾತನಾಡಿ, ಮೇಟಿ ಅವರು ಸರ್ವ ಜನಾಂಗದ ನಾಯಕರು. ಎಲ್ಲರೂ ಅವರ ಮನೆಗೆ ನೇರವಾಗಿ ಹೋಗಬಹುದು. ಸಾಮಾನ್ಯರು ಯಾರು ವೀರಣ್ಣ ಚರಂತಿಮಠರ ಮನೆಗೆ ಕಾಲಿಡಲು ಆಗುವುದಿಲ್ಲ. ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ವೇದಿಕೆಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಬ್ದುಲ್&zwnj; ಹಮೀದ್&zwnj; ಮುಶ್ರಿಫ್, ಸುರೇಶ ಗೂಳಪ್ಪ ರಕರೆಡ್ಡಿ, ಕಲಬಸಪ್ಪ ಹಳ್ಳೂರ, ಸಿದ್ದಣ್ಣ ರಕರೆಡ್ಡಿ, ಶರಣಪ್ಪ ಗುಳೇದ, ವಕೀಲರಾದ ಬಿ.ಜಿ. ಪಾಟೀಲ, ಚನ್ನಪ್ಪ ಕಲ್ಲೋಳ, ಸಂಗಪ್ಪ ಪೈಲದ, ಆದರ್ಶ ಹೊಸಮನಿ, ಪ್ರಭು ಪಾಟೀಲ ಕಂದಗಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.&lt;/p&gt;&lt;p&gt;ಭಗವತಿ ಗ್ರಾಮದ ನಂತರ ಕಿರಸೂರ, ಮುಗಳೊಳ್ಳಿ , ಬೆಣ್ಣೂರ ಗ್ರಾಮಗಳಲ್ಲಿ ಸಚಿವ ಎಂ.ಬಿ. ಪಾಟೀಲ ಬಿಜೆಪಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿದರು. ಈ ವೇಳೆ ತಿಕೋಟಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರು ದಾಶ್ಯಾಳ ಸೇರಿದಂತೆ ಹಲವು ಕಾಂಗ್ರೆಸ್ ಪದಾಧಿಕಾರಿಗಳು ಮನೆ ಮನೆಗೆ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ನಡೆಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep"/>
        </item>
        <item>
            <title><![CDATA[ಬಾಗಲಕೋಟೆಯಲ್ಲೇ ಚರ್ಚೆಗೆ ಬನ್ನಿ: ಸಂಸದ ಕಾರಜೋಳರಿಂದ ಸಚಿವ ಎಂ.ಬಿ.ಪಾಟೀಲ್‌ಗೆ ಪ್ರತಿ ಸವಾಲು]]></title>
            <link>https://kannada.asianetnews.com/politics/mb-patil-challenge-govind-karjol-counter-krishna-upper-project-gvd/articleshow-225g32g</link>
            <guid isPermaLink="true">https://kannada.asianetnews.com/politics/mb-patil-challenge-govind-karjol-counter-krishna-upper-project-gvd/articleshow-225g32g</guid>
            <pubDate>Fri, 03 Apr 2026 19:27:54 +0530</pubDate>
            <description><![CDATA[&lt;p&gt;ಸಿಎಂ, ಡಿಸಿಎಂ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಸಿಎಂ, ಡಿಸಿಎಂ ಅವರ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01htz37cz3ede8gcjejk9qwqqj,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03):&lt;/strong&gt; ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಿಜೆಪಿ ಕೊಡುಗೆ ಏನು? ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ಸವಾಲಿಗೆ ಮಾಜಿ ಜಲಸಂಪನ್ಮೂಲ ಸಚಿವರೂ ಆದ ಸಂಸದ ಗೋವಿಂದ ಕಾರಜೋಳ ಅವರು ಪ್ರತಿ ಸವಾಲು ಹಾಕಿದ್ದು, 8ನೇ ತಾರೀಕಿಗೆ ಬನ್ನಿ ಚರ್ಚೆಗೆ ಸರ್ಕಾರಿ ಫೈಲ್ ತೆಗೆದುಕೊಂಡು ಬನ್ನಿ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸವಾಲು ಹಾಕುತ್ತೇನೆ.&lt;/p&gt;&lt;p&gt;ಬಾಗಲಕೋಟೆಯಲ್ಲಿ ವೇದಿಕೆ ಸಿದ್ಧಪಡಿಸಿ, ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚೆಗೆ ಬನ್ನಿ, ಯಾರು ಎಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ ನೋಡೋಣ ಎಂದು ಹೇಳಿದರು. 1956ರಿಂದಲೂ ಚರ್ಚೆ ಮಾಡೋಣ. ಫೈಲ್ ತೆಗೆದುಕೊಂಡು ಬನ್ನಿ, ಗಾಳಿಯಲ್ಲಿ ಗುಂಡು ಹೊಡೆಯೋದು ಬೇಡ. ಏ.8ರಂದು 12 ಗಂಟೆಗೆ ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ಚರ್ಚೆಗೆ ಬನ್ನಿ ನಾನು ಸಿದ್ಧನಿದ್ದೇನೆ. ಯಾರ್ಯಾರು ಚರ್ಚೆಗೆ ಬರುತ್ತಾರೆ ಬರಲಿ. ಎಲ್ಲರಿಗೂ ಮುಕ್ತ ಆಹ್ವಾನವಿದೆ ಎಂದ ಅವರು, ಸೋಲಿನ ಭೀತಿಯಿಂದ ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.&lt;/p&gt;&lt;p&gt;ಸಿಎಂ, ಡಿಸಿಎಂ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಸಿಎಂ, ಡಿಸಿಎಂ ಅವರ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ. ಡಿ.ಕೆ.ಶಿವಕುಮಾರ್&zwnj;, ಸುರ್ಜೆವಾಲಾ ಹೇಳುತ್ತಾರೆ. ವಿದ್ಯಾರ್ಥಿಗಳು ವೋಟ್ ಹಾಕಿದರೆ ಬಂಧಿಸುತ್ತೇವೆ ಎಂದು ಹೇಳುತ್ತೀರಲ್ಲ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಬಾಗಲಕೋಟೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಇದ್ದಾರೆ. ಐದಾರು ವರ್ಷ ಇಲ್ಲೇ ಇದ್ದು ವ್ಯಾಸಂಗ ಮಾಡುತ್ತಿದ್ದಾರೆ. ನಾನು ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೆವಾಲಾ ಅವರಿಗೆ ಹೇಳ್ತಿನಿ ನಿಮಗೆ ತಾಕತ್ತಿದ್ದರೆ ಅರೆಸ್ಟ್ ಮಾಡಿಸಿ. ಸೋಲಿನ ಭಯದಿಂದ ಈ ರೀತಿ ಹೇಳುತ್ತಿದ್ದೀರಿ. ಕಾಂಗ್ರೆಸ್&zwnj;ಗೆ ವೋಟ್ ಹಾಕದಿದ್ದರೆ ಗ್ಯಾರಂಟಿ ಬಂದ್ ಆಗುತ್ತವೆ ಎಂದು ಭಯ ಹುಟ್ಟಿಸುತ್ತಿದ್ದಿರಿ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲವೇ?&lt;/strong&gt;&lt;/h2&gt;&lt;p&gt;ಅಂಗನವಾಡಿ ಕಾರ್ಯಕರ್ತೆಯರ ಮೂಲಕ, ಆಶಾ ಕಾರ್ಯಕರ್ತೆಯರ ಮೂಲಕ ಭಯ ಹುಟ್ಟಿಸುತ್ತಿದ್ದೀರಿ. ಐದು ದಿನ ಇಲ್ಲಿ ಬಂದು ಕೂತು ಪ್ರಚಾರ ಮಾಡುತ್ತಿದ್ದಿರಿ. ಚುನಾವಣೆ ಆಯೋಗಕ್ಕೂ ದೂರು ನೀಡಿ ಮತದಾರರ ಪಟ್ಟಿ ದೃಢೀಕರಿಸಿದ್ದೇವೆ. ಇದರ ಮೇಲಾದರೂ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು.ವೀರಣ್ಣ ಚರಂತಿಮಠ ಶಾಸಕರಾಗಿದ್ದಾಗ ಮಾಡಿದ ಕೆಲಸದ ವರದಿ ಇಟ್ಟಿದ್ದಾರೆ. ಗೆದ್ದು ಬಂದ ಮೇಲೆ ಏನು ಮಾಡುತ್ತಾರೆ ಅದನ್ನು ತಿಳಿಸಿದ್ದಾರೆ. ನೀವು ಬಾಗಲಕೋಟೆ ಕ್ಷೇತ್ರಕ್ಕೆ ಏನು ಮಾಡಿದ್ದೀರಿ ಎಂದು ಹೇಳಬೇಕು. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುವಂತೆ ರಾಹುಲ್ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಟೀಕಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mb-patil-challenge-govind-karjol-counter-krishna-upper-project-gvd/articleshow-225g32g"/>
        </item>
        <item>
            <title><![CDATA[ಈ ಬಾರಿ ಬಿಜೆಪಿಗೆ 50 ಸಾವಿರ ಮತಗಳ ಅಂತರ ಗೆಲುವು: ಸಂಸದ ಗೋವಿಂದ ಕಾರಜೋಳ]]></title>
            <link>https://kannada.asianetnews.com/politics/govind-karjol-bagalkot-bypoll-bjp-veeranna-charantimath-win-prediction-gvd/articleshow-24vhel8</link>
            <guid isPermaLink="true">https://kannada.asianetnews.com/politics/govind-karjol-bagalkot-bypoll-bjp-veeranna-charantimath-win-prediction-gvd/articleshow-24vhel8</guid>
            <pubDate>Sat, 28 Mar 2026 22:55:42 +0530</pubDate>
            <description><![CDATA[&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g2cq1q1dat0qqr5k075yd6ha,imgname-govinda-karajola.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.28): &lt;/strong&gt;ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುನಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15-16ನೇ ವಾರ್ಡಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.&lt;/p&gt;&lt;p&gt;ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತದಲ್ಲಿ ಒಂದೇ ಒಂದು ಗಮನಾರ್ಹ ಅಭಿವೃದ್ಧಿ ಕಾರ್ಯಗಳಾಗದೆ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. 2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಮತ ನೀಡದೆ ತಪ್ಪು ಮಾಡಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಅನುದಾನ ದುರುಪಯೋಗ&lt;/strong&gt;&lt;/h2&gt;&lt;p&gt;ಈ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದಲಿತರಿಗಾಗಿ ಮೀಸಲಾದ ಅನುದಾನ ದುರುಪಯೋಗ ಮಾಡಿಕೊಂಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.&lt;/p&gt;&lt;p&gt;ಬಿಜೆಪಿ ಅಭ್ಯರ್ಥಿವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ.ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲಿಂ ಮೋಮಿನ್, ನರಸಪ್ಪ ಅಂಬಿಗೇರ, ದುರಗಪ್ಪ ನಾಯಕ್, ಹಣಮಂತ ಬಿಚ್ಚಲಿ, ಪರಶು ಕುರಬರ, ನಾಗರಾಜ ಕಟ್ಟಿಮನಿ, ರಾಜು ಕೋಟೆಕಲ್ಲ, ಬಸವರಾಜ ಅಂಬಿಗೇರ, ಮಲ್ಲಿಕಾರ್ಜುನ ಸುರಪೂರ, ಶೀವು ಸುರಪೂರ, ಅನಿತಾ ಸರೋದೆ, ಭಾಗ್ಯಾ ಉದ್ದನೂರ, ಶಶಿಕಲಾ ಮಜ್ಜಗಿ, ಕುಮಾರ ಪವಾರ್, ಮಂಜು ಚವ್ಹಾನ್, ಜ್ಯೋತಿ ಸೇರಿದಂತೆ ಹಲವರು ಪ್ರಚಾರದಲ್ಲಿ ಭಾಗವಹಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/govind-karjol-bagalkot-bypoll-bjp-veeranna-charantimath-win-prediction-gvd/articleshow-24vhel8"/>
        </item>
        <item>
            <title><![CDATA[ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ: ಶಾಸಕ ಯತ್ನಾಳ ವಾಗ್ದಾಳಿ]]></title>
            <link>https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4</link>
            <guid isPermaLink="true">https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4</guid>
            <pubDate>Fri, 03 Apr 2026 21:55:36 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hm3weqaxtqx509mvdv9qx8jq,imgname-Basavana-Gowda-Yatnal-1705232522589.JPG" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03):&lt;/strong&gt; ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಆಗಮಿಸಿದ್ದ ಅವರು, ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.&lt;/p&gt;&lt;p&gt;ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೊದಲು ಪಂಜಾಬಿನಲ್ಲಿ ಮುನ್ಸಿಪಾಲ್ಟಿ ಚುನಾವಣೆ ಗೆದ್ದು ತೋರಿಸಲಿ. ಎಂಎಲ್&zwnj;ಎ ಚುನಾವಣೆಗೆ ನಿಂತು ಸೋತಿರುವ ವ್ಯಕ್ತಿ ಅವರು. ಮೋದಿ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಬಿಜೆಪಿ ಸೇರ್ಪಡೆ ಹೈಕಮಾಂಡ್&zwnj;ಗೆ ಬಿಟ್ಟ ವಿಷಯ. ನಾನು ದುಂಬಾಲು ಬೀಳುವುದಿಲ್ಲ. ಯೋಗ್ಯ, ಒಳ್ಳೆಯವನು ಎಂದರೆ ತೆಗೆದುಕೊಳ್ಳಲಿ. ಇಲ್ಲದಿದ್ದರೆ ಬಿಡಲಿ. ಅಲವತ್ತುಕೊಳ್ಳುವುದಿಲ್ಲ.&lt;/p&gt;&lt;p&gt;ನನ್ನನ್ನು ಪಕ್ಷದಿಂದ ಹೊರಗಡೆ ಹಾಕಿದ್ದರಿಂದ ಪಕ್ಷಕ್ಕೂ ನಷ್ಟವಾಗಿಲ್ಲ, ನನಗೂ ನಷ್ಟವಾಗಿಲ್ಲ. ಯತ್ನಾಳರನ್ನ ತೆಗೆದುಕೊಳ್ಳದಿದ್ದರೆ ಮುಂದೆ ಕಷ್ಟವಾಗಲಿದೆ ಎಂದು ಇವರೆಲ್ಲ ಹೇಳುತ್ತಾರಲ್ಲ ಎಂದು ಜೊತೆಗಿದ್ದ ಸಿ.ಸಿ.ಪಾಟೀಲ, ಸಿದ್ದು ಸವದಿ, ಅರವಿಂದ ಬೆಲ್ಲದ ಕಡೆಗೆ ತೋರಿಸಿ, ಆಗ ನೋಡೋಣ ಎಂದರು.ಯಾವುದೇ ಕಾರಣಗಳಿಂದ ಉಚ್ಚಾಟನೆಯಾಗಿರಬಹುದು. ಬಿಜೆಪಿ, ಹಿಂದೂ ಸಮಾಜ ರಕ್ಷಣೆಯಾಗಬೇಕು. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಜಗತ್ತಿನಲ್ಲೇ ಒಳ್ಳೆಯ ಕೆಲಸ ಆಗುತ್ತಿದೆ. ಬಿಜೆಪಿಯಿಂದ ಉಚ್ಚಾಟನೆಯಾದರೂ ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧವಿದೆ ಎಂದು ತಿಳಿಸಿದರು.&lt;/p&gt;&lt;p&gt;ವಿಧಾನಸಭೆಯಲ್ಲಾಗಲಿ, ವಿರೋಧ ಪಕ್ಷದ ನಾಯಕರಾಗಲಿ, ಪಕ್ಷದ ಮುಖಂಡರು ಸೇರಿಯೇ ಯಾವ ವಿಷಯ ಮಾತನಾಡಬೇಕು ಎಂದು ವಿಶ್ವಾಸಕ್ಕೆ ತೆಗೆದುಕೊಂಡೇ ಮಾಡುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವುದು, ಬ್ಲಾಕ್&zwnj;ಮೇಲ್ ಮಾಡುವುದು ನನ್ನ ಸ್ವಭಾವವಲ್ಲ. ಪೂಜ್ಯ ತಂದೆಯವರು, ಮಗನಿಗೆ ಬೈಯ್ಯಬಾರದು ಎಂದು ಹೇಳಿದ್ದಾರೆ, ಬೈಯ್ಯುವುದಿಲ್ಲ. ಏ.9ರವರೆಗೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ಮುಂದೇನು ಬದಲಾಗುತ್ತದೆಯೋ ನೋಡೋಣ ಎಂದರು.&lt;/p&gt;&lt;h2&gt;&lt;strong&gt;ಬಿಜೆಪಿಗೆ ದ್ರೋಹ ಮಾಡಿಲ್ಲ&lt;/strong&gt;&lt;/h2&gt;&lt;p&gt;ಕಾಂಗ್ರೆಸ್ಸಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುವುದು ನನ್ನ ಧರ್ಮ ಅಲ್ಲ. ನಾನು ಎಂದೂ ಬಿಜೆಪಿಗೆ ದ್ರೋಹ ಮಾಡುವ ಕೆಲಸ ಮಾಡಿಲ್ಲ. ಬಿಜೆಪಿಯಿಂದ ಶಾಸಕ ಆಗಿದ್ದೇನೆ. ಹಿಂದೆ ನಾನು ಎಂಎಲ್ಸಿ ಆಗಿದ್ದಾಗ ಇದೇ ಎಂ.ಬಿ.ಪಾಟೀಲ ನನ್ನ ಸಿದ್ದರಾಮಯ್ಯ ಬಳಿ ಕರೆದುಕೊಂಡು ಹೋಗಿದ್ದರು. ಆಗ ಪರಿಷತ್ ಸಭಾಪತಿ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ತೆಗೆದುಕೊಂಡು ಬಂದಿದ್ದರು. ಅವಿಶ್ವಾಸದ ಪರ ಮತ ಹಾಕಿದರೆ ನನಗೆ ಸಿಂದಗಿಯಲ್ಲಿ ಕಾಂಗ್ರೆಸ್ ಟಿಕೆಟ್ ಮತ್ತು ಎಷ್ಟು ಬೇಕು ಅಷ್ಟು ಅನುದಾನ ಕೊಡುವ ಭರವಸೆ ನೀಡಿದ್ದರು. ಆದರೆ, ನಾನು ಆಗಲ್ಲ. ನಾನು ಮೂಲ ಬಿಜೆಪಿ. ಏನೋ ಕಾರಣಕ್ಕೆ ಹೊರಗೆ ಹಾಕಿದ್ದಾರೆ ಎಂದಿದ್ದೆ ಎಂದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4"/>
        </item>
        <item>
            <title><![CDATA[ಹಿಂದೂ-ದಲಿತರ ಶೋಷಣೆಗಳು ಕಾಂಗ್ರೆಸ್ ದುರಾಡಳಿತದ ಸಾಧನೆ: ಬಿ.ವೈ.ವಿಜಯೇಂದ್ರ]]></title>
            <link>https://kannada.asianetnews.com/politics/by-vijayendra-attack-on-congress-bagalkote-bypoll-gvd/articleshow-3ogoit7</link>
            <guid isPermaLink="true">https://kannada.asianetnews.com/politics/by-vijayendra-attack-on-congress-bagalkote-bypoll-gvd/articleshow-3ogoit7</guid>
            <pubDate>Tue, 31 Mar 2026 20:53:37 +0530</pubDate>
            <description><![CDATA[&lt;p&gt;ಹಿಂದೂ ಮತ್ತು ದಲಿತರ ಶೋಷಣೆಗಳು ಕಾಂಗ್ರೆಸ್ ದುರಾಡಳಿತದ ಸಾಧನೆಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jhz3byhzg4prg5368jx5gpaq,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.31):&lt;/strong&gt; ಉಪ ಚುನಾವಣೆಯಲ್ಲಿ ಬಿಜೆಪಿಗೆ ಜನರ ಬೆಂಬಲ ಕಂಡು ಕಾಂಗ್ರೆಸ್ ಅತಂತ್ರವಾಗಿದೆ. ದೇಶದ್ರೋಹಿಗಳ ರಕ್ಷಣೆ, ಹಿಂದೂ ಮತ್ತು ದಲಿತರ ಶೋಷಣೆಗಳು ಕಾಂಗ್ರೆಸ್ ದುರಾಡಳಿತದ ಸಾಧನೆಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಜಿಲ್ಲೆಯ ಶಿರೂರ ಪಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ಭ್ರಷ್ಟಾಚಾರ ಮತ್ತು ಹಗರಣಗಳ ಸರದಾರರಾಗಿ ಬಾಗಲಕೋಟೆಯಲ್ಲಿ ಮತ ಕೇಳುತ್ತಿರುವ ಕಾಂಗ್ರೆಸ್ ಅನ್ನು ಬುಡಸಮೇತ ಕಿತ್ತು ಹಾಕಿ. ಭದ್ರತೆ ಮತ್ತು ಭರವಸೆಯ ಬಿಜೆಪಿ ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು.&lt;/p&gt;&lt;p&gt;ಭ್ರಷ್ಟ ಆಡಳಿತಕ್ಕೆ ಹೆಸರಾದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಒಂದೇ ಒಂದು ಸಮರ್ಪಕವಾದ ಯೋಜನೆ ನೀಡಲು ಸಾಧ್ಯವಾಗಿಲ್ಲ. ಮತದಾರರು ಇಟ್ಟುಕೊಂಡ ನಿರೀಕ್ಷೆಗಳನ್ನು ಮಣ್ಣು ಮಾಡಿದೆ. ಕಿಸಾನ್ ಸಮ್ಮಾನ ಯೋಜನೆ, ರೈತ ಮಿತ್ರ ಯೋಜನೆಗಳಂತಹ ರೈತ ಯೋಜನೆಗಳನ್ನು ಮಣ್ಣು ಮಾಡಿ ಅನ್ನದಾತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ಗ್ಯಾರಂಟಿಗಳಿಗೆ ಹಣ ಕೊಡಲಾಗದೇ ಅಬಕಾರಿ ಇಲಾಖೆಗೆ ಸುಂಕ ಏರಿಸಿ ಆಸ್ಪತ್ರೆಗಳಿಗಿಂತ ಹೆಚ್ಚು ಮದ್ಯದ ಅಂಗಡಿ ತೆರೆದಿದ್ದಾರೆ.&lt;/p&gt;&lt;h2&gt;&lt;strong&gt;ಕಾಂಗ್ರೆಸ್ ಅಧಿಕಾರ ದಾಹ&lt;/strong&gt;&lt;/h2&gt;&lt;p&gt;ಬಡವರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿರುವ ಕಾಂಗ್ರೆಸ್ ಅಧಿಕಾರ ದಾಹಕ್ಕಾಗಿ ಬಡವರನ್ನೇ ಬಲಿ ಪಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಭೀಕರ ಮಳೆ ಮತ್ತು ಪ್ರವಾಹದಿಂದ ಮನೆ ಕಳೆದುಕೊಂಡ ಸಾಮಾನ್ಯರಿಗೆ ಹೊಸ ಮನೆ ನಿರ್ಮಿಸಿಕೊಳ್ಳಲು ಬಿಎಸ್&zwnj;ವೈ ₹5 ಲಕ್ಷ ನೀಡಿದ್ದರು. ಆದರೆ , ಕಾಂಗ್ರೆಸ್ ಸರ್ಕಾರಕ್ಕೆ ಒಂದು ಮನೆ ನೀಡಲು ಸಾಧ್ಯವಾಗುತ್ತಿಲ್ಲ. ದಲಿತ ಮಹಿಳೆಯರ ಹ*ತ್ಯೆಯಾದರೂ ಸಾಂತ್ವನ ಹೇಳುವ ಕೆಲಸವನ್ನು ಕಾಂಗ್ರೆಸ್ ಮಾಡಿಲ್ಲ.&lt;/p&gt;&lt;p&gt;ಹಿಂದೂ ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಕ್ರೂರಿಗಳ ರಕ್ಷಣೆ ಮಾಡುತ್ತಿದ್ದಾರೆ. ದೇಶ ವಿರೋಧಿ ಘೋಷಣೆ ಕೂಗುವ ದೇಶದ್ರೋಹಿಗಳ ಪರವಾಗಿ ನಿಲ್ಲುತ್ತಿದೆ ಎಂದರು.ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಮುರುಗೇಶ ನಿರಾಣಿ, ವೀರಣ್ಣ ಚರಂತಿಮಠ ಅವರು ಮಾತನಾಡಿದರು.ಶಾಸಕರಾದ ಸಿದ್ದು ಸವದಿ, ಜಗದೀಶ್ ಗುಡಗುಂಟಿ, ದೊಡ್ಡನಗೌಡ ಪಾಟೀಲ, ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಪಿ.ರಾಜೀವ ಇದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/by-vijayendra-attack-on-congress-bagalkote-bypoll-gvd/articleshow-3ogoit7"/>
        </item>
        <item>
            <title><![CDATA[ಗೋಮಾಂಸ ಮಾರಾಟ ಚಂದಾದಿಂದಲೇ ಕಚೇರಿ ಕಟ್ಟಿದ ಬಿಜೆಪಿ: ಸಚಿವ ಸಂತೋಷ್ ಲಾಡ್ ಆರೋಪ]]></title>
            <link>https://kannada.asianetnews.com/politics/santosh-lad-attack-bjp-pm-modi-bagalkot-statement-gvd/articleshow-5fgt6iq</link>
            <guid isPermaLink="true">https://kannada.asianetnews.com/politics/santosh-lad-attack-bjp-pm-modi-bagalkot-statement-gvd/articleshow-5fgt6iq</guid>
            <pubDate>Fri, 03 Apr 2026 00:25:23 +0530</pubDate>
            <description><![CDATA[&lt;p&gt;ಗೋವನ್ನು ದೇಶದ ಎರಡನೇ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿ ನೊಡೋಣ ಎಂದು ಸವಾಲು ಹಾಕಿರುವ ಸಚಿವ ಸಂತೋಷ್ ಲಾಡ್ , ಗೋಮಾಂಸ ಮಾರಾಟದ ಚಂದಾದಿಂದಲೇ ಬಿಜೆಪಿ ಕಚೇರಿಗಳನ್ನು ಕಟ್ಟಿದ್ದಾರೆ ಎಂದು ಆರೋಪಿಸಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khq83nb7dmph2s9h4p0jxgx0,imgname-----------------------2026-02-18t073824.578-1771380528487.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03):&lt;/strong&gt; ಬಿಜೆಪಿ ಗೋವು ರಕ್ಷಣೆ ಬಗ್ಗೆ ಮಾತನಾಡಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಮೋದಿಯವರು ಹಲಾಲ್ ಸರ್ಟಿಫಿಕೇಟ್ ಕೊಡುತ್ತಿದ್ದಾರೆ. ಗೋವನ್ನು ದೇಶದ ಎರಡನೇ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಿ ನೊಡೋಣ ಎಂದು ಸವಾಲು ಹಾಕಿರುವ ಸಚಿವ ಸಂತೋಷ್ ಲಾಡ್ , ಗೋಮಾಂಸ ಮಾರಾಟದ ಚಂದಾದಿಂದಲೇ ಬಿಜೆಪಿ ಕಚೇರಿಗಳನ್ನು ಕಟ್ಟಿದ್ದಾರೆ ಎಂದು ಆರೋಪಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.&lt;/p&gt;&lt;p&gt;ಬಿಜೆಪಿಯವರ ಬಳಿ ₹10 ಸಾವಿರ ಕೋಟಿ ದುಡ್ಡಿದೆ. 800 ಬಿಜೆಪಿ ಕಚೇರಿ ಕಟ್ಟಿದ್ದಾರೆ, ಬೀಫ್ ರಪ್ತು ಮಾಡಿ ಹಣ ಮಾಡಿದ್ದಾರೆ, ವಿರಾಧಿವೀರ, ಶೂರರಾದ ಬಿಜೆಪಿಯವರು ಬಾಂಗ್ಲಾದವರನ್ನು ದೇಶದಿಂದ ಹೊರಗೆ ಹಾಕಲು ಆಗಿಲ್ಲ ಟೀಕಿಸಿದರು. ಕತಾರ್&zwnj;ನಲ್ಲಿ 20 ಜನ ಸತ್ತಿದ್ದಾರೆ, ಯಾವುದೇ ಟಿವಿಯಲ್ಲಿ ಬಂದಿಲ್ಲ, ಯುದ್ಧ ನಡಿತೀದೆ, ಚುನಾವಣೆ ಪ್ರಚಾರ ನಿಂತಿಲ್ಲ, ಬೇರೆ ಬೇರೆ ರಾಜ್ಯದ ಜನರ ಬಟ್ಟೆ ಧರಿಸಿ ಮೋದಿ ಅಡ್ಡಾಡುತ್ತಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ನೀವು ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತೀರಿ. ಮುಸ್ಲಿಂ, ಪಾಕಿಸ್ತಾನ, ಬಾಂಗ್ಲಾದೇಶ ಇದನ್ನು ಬಿಟ್ಟರೆ ಬೇರೆ ಮಾತನಾಡೋದಿಲ್ಲ. ಈ ದೇಶದ ಹಿಂದೂಗಳ ದಾರಿ ತಪ್ಪಿಸಿ, ಬಿಜೆಪಿಯವರ ಮಕ್ಕಳು ವಿದೇಶದಲ್ಲಿ ಓದುತ್ತಿದ್ದಾರೆ. ಬಿಜೆಪಿಯವರ ಕೆಲ ಮಕ್ಕಳು ಭಾರತೀಯ ನಾಗರಿಕತ್ವ ಹೊಂದಿಲ್ಲ. ನಮ್ಮ ಹಿಂದೂ ಮಕ್ಕಳು ಹೊಡೆದಾಡಿ ಅವರು ಕೇಸ್&zwnj; ಹಾಕಿಸಿಕೊಳ್ಳುವಂತಾಗಿದೆ ಎಂದರು.&lt;/p&gt;&lt;p&gt;ಸಿಎಂಗೆ ಸೋಲಿನ ಭಯ ಕಾಡ್ತಿದೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ ಲಾಡ್&zwnj; ಅವರು, ರಾಜ್ಯದ ಸಿಎಂ ಯಾಕೆ ಪ್ರಚಾರ ಮಾಡಬಾರದು? ಹಲವು ವರ್ಷದಿಂದ ಮೋದಿ ಬಿಟ್ಟರೆ ಯಾರಾದರೂ ಇದ್ದಾರಾ? ಮುಂದೆ ಗ್ರಾಪಂ, ಜಿಪಂ, ತಾಪಂ ಮುನ್ಸಿಪಾಲಿಟಿಗೂ ಮೋದಿ ಪ್ರಚಾರಕ್ಕೆ ಬರಬೇಕು, ಬರಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದರು. ಮೇಕ್ ಇನ್ ಇಂಡಿಯಾ ಅಂತಿದ್ದಾರೆ, ಒಂದು ಗುಂಡು ಪಿನ್ನು, ಸೂಜಿಯನ್ನೂ ತಯಾರು ಮಾಡಿಲ್ಲ, ದೇಶವನ್ನ ಆದಾನಿ ಅಂಬಾನಿಗೆ ಮಾರಿದ್ದಾರೆ.&lt;/p&gt;&lt;p&gt;ಆರ್ಥಿಕತೆಯಲ್ಲಿ ಕರ್ನಾಟಕ ನಂ.1 ಆಗಲು ಗ್ಯಾರಂಟಿ ಸೇರಿ ಕಾಂಗ್ರೆಸ್ ಯೋಜನೆಗಳೇ ಕಾರಣವಾಗಿವೆ. ಬಿಜೆಪಿಯಲ್ಲಿ ಪ್ರಧಾನಿ ಇಲ್ಲಿಗೆ ಪ್ರಚಾರಕ್ಕೆ ಬಂದಿದ್ದರು. ಚುನಾವಣೆ ನಡೀತಿದೆ , ಟಿವಿಯಲ್ಲಿ ಅವರದೇ ನೋಡಬೇಕು, ಶೂರಾಧಿಶೂರ, ಭೂಪ ಮೋದಿ ಸೋಷಿಯಲ್ ಮೀಡಿಯಾದ ಹುಡುಗರು ಹಾಕಿದ ವಿಡಿಯೋ ಯಾಕೆ ಡಿಲಿಟ್ ಮಾಡಬೇಕಿತ್ತು ಎಂದು ಪ್ರಶ್ನಿಸಿದರು. ಚರಂತಿಮಠ ಪರ ಯತ್ನಾಳ ಪ್ರಚಾರ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿದ ಸಚಿವರು, ಯತ್ನಾಳ ಅವರು ಫ್ರೀ ಇದ್ದಾರೆ, ಏನು ಬೇಕಾದ್ರೂ ಮಾಡಬಹುದು ಎಂದರು.&lt;/p&gt;&lt;h2&gt;&lt;strong&gt;ಸಚಿನ್, ಕೊಹ್ಲಿ, ಲಾರಾ ಎಲ್ಲರಿಗೂ ಒಬ್ಬ ಸಿದ್ದರಾಮಯ್ಯ ಸಮ&lt;/strong&gt;&lt;/h2&gt;&lt;p&gt;ಸಿಎಂ ಅವರ ಬಗ್ಗೆ ಬಿಜೆಪಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ, ನಮ್ಮ ಸಿಎಂ ಅಧಿವೇಶನದಲ್ಲಿ 8 ತಾಸು ಉತ್ತರ ಕೊಟ್ಟಿದ್ದಾರೆ. ಕ್ರಿಕೆಟ್&zwnj;ನಲ್ಲಿ ಸಚಿನ್, ಕೊಹ್ಲಿ, ಲಾರಾ ಎಲ್ಲರೂ ಸೇರಿ ಒಬ್ಬ ಸಿದ್ದರಾಮಯ್ಯ ಇದ್ದಂತೆ. ರಾಜ್ಯದಲ್ಲಿ ಸಿಂಹಪಾಲು ಆಡಳಿತವನ್ನು ಕಾಂಗ್ರೆಸ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಹೆಚ್ಚು ಬಜೆಟ್&zwnj; ಮಂಡಿಸಿದ್ದಾರೆ, ಬಿಜೆಪಿಯವರು ಗುಜರಾತ್ ನಂ.1 ಅಂತಿದ್ದಾರೆ, ಆದರೆ ಎಲ್ಲದರಲ್ಲೂ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಾಂಗ್ರೆಸ್ ಕಾರ್ಯಕ್ರಮಗಳೇ ಇದಕ್ಕೆ ಕಾರಣವಾಗಿದೆ, ಬಿಜೆಪಿ ಕಾಂಗ್ರೆಸ್ ಆಡಳಿತ ಹೋಲಿಕೆ ಮಾಡಿದರೆ ಕಾಂಗ್ರೆಸ್ ಆಡಳಿತದ ರಾಜ್ಯ ಉತ್ತಮವಾಗಿವೆ ಎಂದು ಸಮರ್ಥಿಸಿಕೊಂಡರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/santosh-lad-attack-bjp-pm-modi-bagalkot-statement-gvd/articleshow-5fgt6iq"/>
        </item>
        <item>
            <title><![CDATA[ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಸಚಿವ ಬೈರತಿ ಸುರೇಶ್]]></title>
            <link>https://kannada.asianetnews.com/karnataka-districts/byrati-suresh-bagalkot-bypoll-congress-umesh-meti-campaign-gvd/articleshow-8opqr1g</link>
            <guid isPermaLink="true">https://kannada.asianetnews.com/karnataka-districts/byrati-suresh-bagalkot-bypoll-congress-umesh-meti-campaign-gvd/articleshow-8opqr1g</guid>
            <pubDate>Thu, 02 Apr 2026 21:22:35 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ಅವರು ರಾಜ್ಯರ ಜನತೆಗೆ ಹಲವು ಭಾಗ್ಯಗಳ ಮೂಲಕ ಕಳೆದ ಮೂರು ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k291qq5s0ewbygmzw6ysg0mm,imgname-dbd-1754797956281.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.02): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯರ ಜನತೆಗೆ ಹಲವು ಭಾಗ್ಯಗಳ ಮೂಲಕ ಕಳೆದ ಮೂರು ವರ್ಷಗಳಿಂದ ಪಂಚ ಗ್ಯಾರಂಟಿ ಯೋಜನೆಗಳಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ನಗರದಲ್ಲಿ ವಿದ್ಯಾಗಿರಿ ಸೇರಿ ಹಲವೆಡೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಮನೆ ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದರು.&lt;/p&gt;&lt;p&gt;ಬಾಗಲಕೋಟೆ ಮತ್ತು ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜು ಕನಸು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನನಸಾಗಿದೆ. ಹಿಂದಿನ ಬಿಜೆಪಿ ಸರಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಆದರೆ ಎಚ್.ವೈ.ಮೇಟಿ ಶಾಸಕರಾದ ಬಳಿಕ ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಮಂಜೂರಾತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.&lt;/p&gt;&lt;p&gt;ಎಚ್.ವೈ.ಮೇಟಿ ತಮ್ಮ ಅಧಿಕಾರ ಅವಧಿಯಲ್ಲಿ ಬಾಗಲಕೋಟೆ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ. ಉಮೇಶ ಮೇಟಿ ಅವರು ಜನಪರ ಕಾಳಜಿವುಳ್ಳವರು. ಉಮೇಶ ಅವರಿಗೆ ಅಮೂಲ್ಯವಾದ ಮತ ಚಲಾಯಿಸಿ ಗೆಲುವು ತಂದುಕೊಡಬೇಕು. ಬಿಜೆಪಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಸುಳ್ಳು ಹೇಳಿಕೆ ನೀಡಿ ಜನರಿಗೆ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಗೆಲುವಿಗೆ ಶ್ರಮಿಸಿ&lt;/strong&gt;&lt;/h2&gt;&lt;p&gt;ಈ ನಡುವೆ ಸಚಿವ ಬೈರತಿ ಸುರೇಶ್ ಅವರು ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿ, ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಗೆಲುವಿಗೆ ಶ್ರಮಿಸುವಂತೆ ಕಿವಿಮಾತು ಹೇಳಿದರು. ಶಾಸಕ ರಾಘವೇಂದ್ರ ಹಿಟ್ನಾಳ, ಮಲ್ಲಿಕಾರ್ಜುನ ಮೇಟಿ, ರಕ್ಷಿತಾ ಭರತಕುಮಾರ ಈಟಿ, ಶ್ರೀಶೈಲ ದಳವಾಯಿ ಇತರರು ಇದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/byrati-suresh-bagalkot-bypoll-congress-umesh-meti-campaign-gvd/articleshow-8opqr1g"/>
        </item>
        <item>
            <title><![CDATA[ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಜನರು ರೋಸಿ ಹೋಗಿದ್ದಾರೆ: ಸಂಸದ ಜಗದೀಶ ಶೆಟ್ಟರ್]]></title>
            <link>https://kannada.asianetnews.com/politics/jagadish-shettar-attack-on-congress-government-funds-corruption-gvd/articleshow-a4gif7w</link>
            <guid isPermaLink="true">https://kannada.asianetnews.com/politics/jagadish-shettar-attack-on-congress-government-funds-corruption-gvd/articleshow-a4gif7w</guid>
            <pubDate>Sat, 28 Mar 2026 21:55:16 +0530</pubDate>
            <description><![CDATA[&lt;p&gt;ಮಹಿಳೆಯರಿಗೆ ಉಚಿತ ಪ್ರಯಾಣ, ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದಕ್ಕೆ ವಿರೋಧವಿಲ್ಲ. ಆದರೆ, ನಾಲ್ಕೂ ವಿದ್ಯುತ್ ನಿಗಮಗಳಿಗೆ, ಸಾರಿಗೆ ನಿಗಮಗಳಿಗೆ ಹಣ ನೀಡದ್ದರಿಂದ ವೇತನ ನೀಡಲೂ ಗತಿ ಇಲ್ಲದಂತಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಟೀಕಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gy6pk96xqm75k0a856qwdd61,imgname-Jagadish-Shettar-1681704723677.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.28):&lt;/strong&gt; ಮಹಿಳೆಯರಿಗೆ ಉಚಿತ ಪ್ರಯಾಣ, ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದಕ್ಕೆ ವಿರೋಧವಿಲ್ಲ. ಆದರೆ, ನಾಲ್ಕೂ ವಿದ್ಯುತ್ ನಿಗಮಗಳಿಗೆ, ಸಾರಿಗೆ ನಿಗಮಗಳಿಗೆ ಹಣ ನೀಡದ್ದರಿಂದ ವೇತನ ನೀಡಲೂ ಗತಿ ಇಲ್ಲದಂತಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲದ ಸುಳಿಗೆ ಸಿಲುಕಿರುವ ರಾಜ್ಯ ಸರ್ಕಾರದ ಬಳಿ, ಅಭಿವೃದ್ಧಿ ಕೆಲಸಗಳಿಗೆ ನೀಡಲು ಅನುದಾನವಿಲ್ಲ. ಇದರಿಂದಾಗಿ ಕೇಂದ್ರದ ರೈಲು ಮಾರ್ಗ ನಿರ್ಮಾಣದ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ ಎಂದು ಆರೋಪಿಸಿದರು.&lt;/p&gt;&lt;p&gt;ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಆಡಳಿತ ಹಳಿ ತಪ್ಪಿದ್ದು, ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸರ್ಕಾರಕ್ಕೆ ಪಾಠ ಕಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜಗತ್ತಿನಲ್ಲಿ ಯುದ್ಧದ ವಾತಾವರಣ ಕವಿದಿದ್ದರೂ ದೇಶದಲ್ಲಿ ಜನರು ಸುರಕ್ಷಿತವಾಗಿರಲು ಪ್ರಧಾನಿ ಮೋದಿ ಅವರ ಸಮರ್ಥ ಆಡಳಿತವೇ ಕಾರಣ. ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ ನಾಯಕ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ಗೆ 70 ಡಾಲರ್&zwnj; ನಿಂದ 120 ಡಾಲರ್ ಗೆ ಹೆಚ್ಚಾಗಿದೆ. ವಿವಿಧ ದೇಶಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ. ಭಾರತದಲ್ಲಿ ಮೋದಿ ಅವರು ಎಕ್ಸೈಜ್ ತೆರಿಗೆ ಕಡಿಮೆ ಮಾಡುವ ಮೂಲಕ ಬೆಲೆ ಹೆಚ್ಚಳಕ್ಕೆ ತಡೆ ಹಾಕಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ಕಾಂಗ್ರೆಸ್&zwnj; ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಒಂದೆಡೆ ಫೈಟ್ ನಡೆದಿದ್ದರೆ, ಇನ್ನೊಂದೆಡೆ ಶಾಸಕರು ಸಚಿವರಾಗಲು ಪೈಪೋಟಿ ನಡೆಸಿದ್ದಾರೆ. ಜನರ ಸಂಕಷ್ಟ ಆಲಿಸಲೂ ಅವರಿಗೆ ಪುರುಸೊತ್ತಿಲ್ಲ ಎಂದು ಟೀಕಿಸಿದರು. ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ವಿಧಾನಸೌಧದ ಮುಂದೆ ಮೊನ್ನೆ ಶಾಸಕರ ಗ್ರೂಪ್ ಫೋಟೊ ತೆಗೆಸಲಾಗಿದೆ. ಸಾಮಾನ್ಯವಾಗಿ ಅವಧಿ ಪೂರ್ಣಗೊಳ್ಳುವಾಗ ತೆಗೆಯಿಸಲಾಗುತ್ತದೆ. ಈಗ ತೆಗೆಸಿರುವುದು ನೋಡಿದರೆ ಅವರಿಗೆ ಅವರ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತಿಳಿಸಿದೆಯಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ರಿಪೇರಿ ಮಾಡಲಿ ಎಂದು ವ್ಯಂಗ್ಯ&lt;/strong&gt;&lt;/h2&gt;&lt;p&gt;ವಿಧಾನಸೌಧದ ಕೊಠಡಿಗಳಿಗೆ ಹೊಸ ಬಾಗಿಲು, ಪಾವಟಿಗೆಗೆ ಮ್ಯಾಟ್ ಹೀಗೆ ವಿವಿಧ ಕೆಲಸಗಳನ್ನು ಸ್ಪೀಕರ್ ಮಾಡಿಸುತ್ತಿದ್ದಾರೆ. ಅವರು ಮೊದಲು ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಅದರ ರಿಪೇರಿ ಮಾಡಲಿ ಎಂದು ವ್ಯಂಗ್ಯವಾಡಿದರು. ಸಚಿವ ಸತೀಶ ಜಾರಕಿಹೊಳಿ ಎರಡು ತಿಂಗಳಿಂದ ಇಲ್ಲಿ ಅಡ್ಡಾಡುತ್ತಾ ಕಾಂಗ್ರೆಸ್ ಮತ ಕೇಳುತ್ತಿದ್ದಾರೆ. ಬಿಜೆಪಿ ಹೆಚ್ಚು ಮಾಡಿದ್ದ ಮೀಸಲಾತಿ ಪ್ರಮಾಣವನ್ನು ಶೇ.7ರಿಂದ ಶೇ3ಕ್ಕೆ ಇಳಿಸಿದಾಗ ಯಾಕೆ ಮಾತನಾಡಲಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅನ್ಯಾಯವಾದಾಗ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು. ಸಂಸದ ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಅರುಣ ಶಹಾಪುರ, ಶಾಂತಗೌಡ ಪಾಟೀಲ, ಶರಣು ತಳ್ಳಿಕೇರಿ, ಡಿ.ಬಿ. ಸಿದ್ದಾಪುರ, ಬಸವರಾಜ ಯಂಕಂಚಿ, ಸತ್ಯನಾರಾಯಣ ಹೇಮಾದ್ರಿ ಇದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/jagadish-shettar-attack-on-congress-government-funds-corruption-gvd/articleshow-a4gif7w"/>
        </item>
        <item>
            <title><![CDATA[ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಸಂಘಟನೆ ಅಪಪ್ರಚಾರ ಆರೋಪ, ಕೇಸರಿ ಶಾಲು ಹಾಕಿ ಕೃತ್ಯ]]></title>
            <link>https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva</link>
            <guid isPermaLink="true">https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva</guid>
            <pubDate>Sat, 04 Apr 2026 23:20:20 +0530</pubDate>
            <description><![CDATA[&lt;p&gt;ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಸಂಘಟನೆ ಅಪಪ್ರಚಾರ, ಕೇಸರಿ ಶಾಲು ಹಾಕಿ ಕೃತ್ಯ, ಸಂಘಟಕ ವಶಕ್ಕೆ ಪಡೆಯಲಾಗಿದೆ. ಬಜೆಪಿ ನಾಯಕರು ಹಾಗೂ ಕಾರ್ಯಕರ್ತರು ಇದೀಗ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kncsvbn9735s9rvatzf9zy2n,imgname-bagalkote-1775324999336.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.04)&lt;/strong&gt; ಕರ್ನಾಟಕ ವಿಧಾನಸಭೆ ಉಪ ಚುನಾವಣೆ ಕಣ ರಂಗೇರಿದೆ. ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕೋಲಾಹಗಳು ಶುರುವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಗೆಲ್ಲಲು ಅಡ್ಡ ದಾರಿ ಹಿಡಿದಿರುವುದು ಬಯಲಾಗಿದೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಎನ್&zwnj;ಎಸ್&zwnj;ಯುಐ ಸಂಘಟನೆ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಕರಪತ್ರ ಹಂಚುತ್ತಾ ಅಪಪ್ರಚಾರ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ NSUI ಸಂಘಟನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ. ಸುಮಾರು 10 ಮಂದಿ ಇದ್ದ ಈ ತಂಡದ ಎಲ್ಲಾ ಸದಸ್ಯರನ್ನು ಅರೆಸ್ಟ್ ಮಾಡುವಂತೆ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ.&lt;/p&gt;&lt;h2&gt;ಕ್ಯಾಂಪಸ್&zwnj;ನಲ್ಲಿ ಗಲಾಟೆ&lt;/h2&gt;&lt;p&gt;ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್&zwnj;ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್&zwnj; ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.&lt;/p&gt;&lt;p&gt;ಕರಪತ್ರ ಹಂಚಿಕೆ ಮಾಡ್ತಿದ್ದವರ ಮೇಲೆ ದೂರು ದಾಖಲಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಜನರನ್ನ ವಶಕ್ಕೆ ಪಡೆಯಲಾದಗಿದೆ. ಇನ್ನುಳಿದವರ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.&lt;/p&gt;&lt;h2&gt;ಕರಪತ್ರ ಹಂಚುತ್ತಿದ್ದ ಓರ್ವನ ಹಿಡಿದ ಬಿಜೆಪಿ ಕಾರ್ಯಕರ್ತರು&lt;/h2&gt;&lt;p&gt;ಕರಪತ್ರ ಹಂಚುತ್ತಿದ್ದ ಎಂದು ಓರ್ವ ಯುವಕನನ್ನು ಬಿಜೆಪಿ ಕಾರ್ಯಕರ್ತರು ಹಿಡಿದಿದ್ದಾರೆ. ಕಾರಲ್ಲಿ ಕೂತಿದ್ದ ಯುವಕನನ್ನು ಕಾರ್ಯಕರ್ತರು ಹಿಡಿದಿದ್ದಾರೆ. ಬಳಿಕ ಯುವಕನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.&lt;/p&gt;&lt;h2&gt;ಬಿಜೆಪಿ ಮುಖಂಡ ಅರುಣ ಶಹಾಪೂರ ಪ್ರತಿಕ್ರಿಯೆ&lt;/h2&gt;&lt;p&gt;ಮೊನ್ನೆ ಡಿಸಿಎಂ ಮಾದ್ಯಮಗೋಷ್ಠಿಯಲ್ಲಿ ಕೆಲ ಹೇಳಿಕೆ ನೀಡಿದ್ದರು. ವಿದ್ಯಾರ್ಥಿಗಳು ಯಾರಾದ್ರೂ ಡಬಲ್ ಓಟ್ ಮಾಡಿದ್ರೆ ಅರೆಸ್ಟ್ ಮಾಡ್ತೀವಿ ಎಂದಿದ್ರು. ಡಿಸಿಎಂ ಹೇಳಿಕೆಯಂತೆ ಈಗ ಕರಪತ್ರ ಹಂಚಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಕಾಲೇಜ್ ಕ್ಯಾಂಪಸ್ ಗೆ ಬಂದಿದ್ದಾರೆ. ಈಗಾಗಲೇ ಕೆಲವು ಜನರನ್ನ ವಶಕ್ಕೆ ಪಡೆದಿದ್ದಾರೆ. ಇನ್ನುಳಿದವರನ್ನೂ ಬಂಧಿಸಬೇಕು. ಮೋದಿಯವರು ಪ್ರಜಾಪ್ರಭುತ್ವದಲ್ಲಿ ಫೇರ್ ಆಂಡ್ ಫ್ರೀ ಎಲೆಕ್ಷನ್ ಆಗಬೇಕು ಎಂದಿದ್ದಾರೆ. ಆದ್ರೆ ಕಾಂಗ್ರೆಸ್ಸಿಗರು ಈ ರೀತಿ ಮಾಡೋದು ಸರಿಯಲ್ಲ. ಮುಂದಿನ ದಿನಗಳಲ್ಲಿ ಚರ್ಚಿಸಿ ಹೋರಾಟ ಮಾಡ್ತೇವೆ ಎಂದು ಅರುಣ ಶಹಾಪೂರ ಹೇಳಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Chethan Kumar</dc:creator>
            <atom:link href="https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva"/>
        </item>
        <item>
            <title><![CDATA[Karnataka Bypolls: 'ನಿಮ್ಮಂಥ ಕಳ್ಳೆತ್ತು ದೇಶದಲ್ಲೇ ಇಲ್ಲ..' ಬಿಜೆಪಿ ಕಳ್ಳೆತ್ತು ಎಂಬ ಸಿಎಂ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿ ತಿರುಗೇಟು]]></title>
            <link>https://kannada.asianetnews.com/politics/bagalkote-bypolls-2026-chalavadi-narayanaswamy-slams-cm-siddaramaiah-rav/articleshow-dvuqaxt</link>
            <guid isPermaLink="true">https://kannada.asianetnews.com/politics/bagalkote-bypolls-2026-chalavadi-narayanaswamy-slams-cm-siddaramaiah-rav/articleshow-dvuqaxt</guid>
            <pubDate>Tue, 31 Mar 2026 12:53:47 +0530</pubDate>
            <description><![CDATA[&lt;p&gt;ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ, ಬಿಜೆಪಿ ಮುಖಂಡ ಚಲುವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಸ್ತೆ ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಈ ಸರ್ಕಾರಕ್ಕೆ ಜನರೇ ಮಣ್ಣು ಮುಚ್ಚಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ke3c1asv1412296xzq7rh07g,imgname-chalavadi-narayanaswamy-1767492332347.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.31): &lt;/strong&gt;ನಾನು ನಿನ್ನೆ ಕೆಲ ಹಳ್ಳಿಗಳಿಗೆ ಹೋಗಿದ್ದೆ. ಅಲ್ಲಿನ ಪರಿಸ್ಥಿತಿ ಹೇಗಿದೆ ಎಂದರೆ ಈ ಸರ್ಕಾರಕ್ಕೆ ಗುಂಡಿ ಮುಚ್ಚಲಿಕ್ಕೆ ಯೋಗ್ಯತೆ ಇಲ್ಲ ಎಂದು ಚಲುವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, 'ಉಮೇಶ್ ಮೇಟಿ ಗೆಲ್ಲಿಸಿ, ನನ್ನ ಕೈ ಬಲಪಡಿಸಿ' ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದರು.&lt;/p&gt;&lt;p&gt;ಕಾಂಗ್ರೆಸ್&zwnj;ನವರು ಕಳೆದ ಚುನಾವಣೆಗೆ ಬಂದೋರು ಮತ್ತೆ ಈ ಹಳ್ಳಿಗಳ ಕಡೆ ತಲೆಹಾಕಿ ಮಲಗಿಲ್ಲ. ಇವತ್ತು ಅವರು(ಸಿಎಂ) ಬರುತ್ತಾರೆ ಎಂದು ಕಪ್ಪಗಿರುವ ರಸ್ತೆಗೆ ಕೆಂಪು ಮಣ್ಣು ಹಾಕಿ ಮುಚ್ಚಿದ್ದಾರೆ. ಆದರೆ ಇಲ್ಲಿನ ಜನ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಹಳ್ಳದಲ್ಲಿ ಕೆಂಪು ಮಣ್ಣು ಹಾಕಿ ಮುಚ್ಚುವ ಕಾಲ ಬಂದಿದೆ, ಮುಚ್ಚುತ್ತಾರೆ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;h2&gt;ಚೀಫ್ ಮಿನಿಸ್ಟರ್ ಅರ್ಥ ಕಳ್ಕೊಂಡು ಚೀ..ಫ್ ಮಿನಿಸ್ಟರ್ ಆಗಿದೆ&lt;/h2&gt;&lt;p&gt;ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಚಲವಾದಿ ನಾರಾಯಣಸ್ವಾಮಿ ಅವರು, ಸಿಎಂ ಅಂದ್ರೆ ಚೀಫ್ ಮಿನಿಸ್ಟರ್ ಆದ್ರೆ ಇವರಿಂದಾಗಿ ಅದು ಅರ್ಥ ಕಳ್ಕೊಂಡು ಅದೀಗ ಚೀ..ಫ್ ಮಿನಿಸ್ಟರ್ ಆಗಿದೆ. ಇವರ ಪರಿಸ್ಥಿತಿ ಇಷ್ಟೇನೇ ಯಾಕೆಂದರೆ ಇನ್ನೊಂದು ಹದಿನೈದು ದಿವಸ ಸಿಎಂ ಆಗಿರಬಹುದು. ಚುನಾವಣೆ ಬಳಿಕ ಆ ಕಡೆಯಿಂದ ಕೀ ಕೊಡೋಕೆ ಶುರುವಾಗಿದೆ. ಸದನದಲ್ಲಿ ಕಲಾಪ, ಚುನಾವಣೆ ಬರದೇ ಇದ್ದಿದ್ರೆ ಈಗಾಗಲೇ ಮುಖ್ಯಮಂತ್ರಿ ರಿಸೈನ್ ಮಾಡ್ಬಿಟ್ಟಿರ್ತಿದ್ರು. ಆದರೆ ಚುನಾವಣೆ ಬಂದಾಗ ರಾಜೀನಾಮೆ ಕೊಟ್ರೆ ನಾವು ಸೋತುಬಿಡ್ತೇವೆ ಎಂಬ ಆತಂಕದಿಂದ ಸಿಎಂ ಆಗಿದ್ದ ಸಿದ್ದರಾಮಯ್ಯ ಮುಂದುವರಿದಿದ್ದಾರೆ. ಆದರೆ ಈ ಕಾಂಗ್ರೆಸ್ ಅವನ್ನು ಇಟ್ಕೊಂಡ್ರೂ ಸೋಲುತ್ತೆ. ಅವರ ಪರಿಸ್ಥಿತಿ ಬಹಳ ಹದಗೆಟ್ಟಿದೆ ಅವರಿಗೆ ಅರ್ಥವಾಗುತ್ತಿಲ್ಲ. ಇದೇ ಕಾರಣಕ್ಕೆ ಮತ ಹಾಕುವಂತೆ ಮತದಾರರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h3&gt;ದಾವಣಗೆರೆ, ಬಾಗಲಕೋಟೆ ಎರಡಲ್ಲೂ ನಾವೇ ಗೆಲ್ತೀವಿ&lt;/h3&gt;&lt;p&gt;ಬಾಗಲಕೋಟೆ, ದಾವಣಗೆರೆ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಚಲುವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಯಾವುದಕ್ಕೂ ಸಮಯವಿಲ್ಲ. ಕೈ ಬಲಪಡಿಸಬೇಕು ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ. ಯಾವ ಕೈ ಬಲಪಡಿಸಬೇಕು? ಡಿಕೆ ಶಿವಕುಮಾರ್ ಅವರ ಕಾಲು ಎಳೆಯುವ ಕೈ ಬಲಪಡಿಸಬೇಕಾ? ಎಂದು ಲೇವಡಿ ಮಾಡಿದರು.&lt;/p&gt;&lt;h3&gt;ಬಿಜೆಪಿಗರು ಕಳ್ಳೆತ್ತು ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು&lt;/h3&gt;&lt;p&gt;ಬಿಜೆಪಿಗರು ಕಳ್ಳೆತ್ತು ಇದ್ದಂಗೆ ರಾಜ್ಯದಲ್ಲಿ ಉಳುಮೆ ಮಾಡುವ ಎತ್ತುಗಳು ಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡೀದ ಚಲವಾದಿ ನಾರಾಯಣಸ್ವಾಮಿ ಅವರು, ಸಿದ್ದರಾಮಯ್ಯನವರು ಎತ್ತುಗಳಿಗೆ ದೋಖಾ ಮಾಡಿಯೇ ಬಂದವರು. ಅವರು&zwnj; ಮೊದಲು ಇದ್ದ ಪಕ್ಷದ ಚಿಹ್ನೆ ಯಾವುದು? ಅಲ್ಲಿ ದೋಖಾ ಮಾಡಿ ಕೈ ಹಿಡಕೊಂಡು ಬಂದವರು. ಈ ಕೈ ಕತ್ತರಿಸಿದ ಕೈ, ತುಂಡರಿಸಿದ ಕೈ ಅದು. ಆಕ್ಸಿಡೆಂಟ್ ಆದಾಗ ತುಂಡಾಗಿ ಬಿದ್ದಿರುತ್ತದಲ್ಲ ಆ ಕೈ. ಈಗ ಅದಕ್ಕೆ ಜೀವ ಇಲ್ಲ ಅದು ನಿರ್ಜೀವ ಕೈ. ಅದರಿಂದ ಏನೂ ಆಗುವುದಿಲ್ಲ, ನಾವು ಕಳ್ಳೆತ್ತು ಅಲ್ಲ ಸುಳ್ಳೆತ್ತೂ ಅಲ್ಲ, ನಿಮ್ಮಂತಹ ಕಳ್ಳೆತ್ತು ದೇಶದಲ್ಲೇ ಇಲ್ಲ. ಹೀಗಾಗಿ ಮುಂದೆ ದೇಶದಿಂದಲೇ ನೀವು ಕಣ್ಮರೆಯಾಗುವ ಪರಿಸ್ಥಿತಿ ಜನ ಎದುರು ನೋಡ್ತಾ ಇರುವಾಗ ಅದರ ಬಗ್ಗೆ ಏನು ಮಾತಾನಾಡ್ತೀರಿ? ಕಳ್ಳೆತ್ತುಗಳು ಅಂದ್ರೆ ಕಾಂಗ್ರೆಸ್ ಪಕ್ಷವೇ ಎಂದು ತಿರುಗೇಟು ನೀಡಿದರು..&lt;/p&gt;]]></content:encoded>
            <category>bagalkot</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/bagalkote-bypolls-2026-chalavadi-narayanaswamy-slams-cm-siddaramaiah-rav/articleshow-dvuqaxt"/>
        </item>
        <item>
            <title><![CDATA[ಶಾಸಕ ಬಸನಗೌಡ ಯತ್ನಾಳ ಕಾಂಗ್ರೆಸ್ ಪರ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/politics/cm-siddaramaiah-reaction-yatnal-bjp-politics-karnataka-gvd/articleshow-fcdbgxg</link>
            <guid isPermaLink="true">https://kannada.asianetnews.com/politics/cm-siddaramaiah-reaction-yatnal-bjp-politics-karnataka-gvd/articleshow-fcdbgxg</guid>
            <pubDate>Wed, 01 Apr 2026 19:25:25 +0530</pubDate>
            <description><![CDATA[&lt;p&gt;ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.01): &lt;/strong&gt;ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ. ಉಚ್ಚಾಟನೆ ಮಾಡಿದ ಪಾರ್ಟಿ ಪರ ಯಾಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಗೊತ್ತಿರುವ ಮಟ್ಟಿಗೆ ಶಾಸಕ ಬಸನಗೌಡ ಯತ್ನಾಳ ಬಿಜೆಪಿಗೆ ಮಾಡಲಿಕ್ಕಿಲ್ಲ. ಕಾಂಗ್ರೆಸ್ ಪರ ಪ್ರಚಾರಕ್ಕೆ ಯತ್ನಾಳಗೆ ಮನವಿ ಮಾಡ್ತೀರಾ ಎಂಬ ಪ್ರಶ್ನೆಗೆ ಇಲ್ಲವೆಂದು ಸನ್ನೆ ಮಾಡಿದರು.&lt;/p&gt;&lt;p&gt;&lt;strong&gt;ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ?: &lt;/strong&gt;ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಹೇಳಿರುವ ಚಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ? ಅವರು ನಮ್ಮ ಹೈಕಮಾಂಡ್ ಅಲ್ಲ. ನಾರಾಯಣಸ್ವಾಮಿ ಇರೋದು ಯಾವ ಪಾರ್ಟಿ? ಬಿಜೆಪಿಯಲ್ಲಿರೋ ನಾರಾಯಣಸ್ವಾಮಿ ಹೇಗೆ ಹೇಳ್ತಾರೆ? ಏನೋ ಹೇಳಬೇಕೋ ಹೇಳ್ತಾರೆ. ಅಂತ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ ಎಂದರು.&lt;/p&gt;&lt;p&gt;ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್&zwnj;ನವರು ಕೆಲಸ ಮಾಡುತ್ತಿದ್ದಾರೆ ಎಂದಿರುವ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಬಿಜೆಪಿಯವರೇ ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ ಎಂದರು. ವಂಶವಾಹಿನಿಗೆ ಕಾಂಗ್ರೆಸ್ ಮಣೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪದ್ಧತಿ ಯಾರೇ ನಿಧನರಾದರೆ ಅವರ ಮನೆತನಕ್ಕೆ ಟಿಕೆಟ್ ಕೊಡೋದು.&lt;/p&gt;&lt;h2&gt;&lt;strong&gt;ಧಮ್ಕಿ ಹಾಕೋದು ಬಿಜೆಪಿಯವರು&lt;/strong&gt;&lt;/h2&gt;&lt;p&gt;ಬಾಗಲಕೋಟೆಗೆ ಮೇಟಿ ಪುತ್ರ , ದಾವಣಗೆರೆ ಶಾಮನೂರರ ಮೊಮ್ಮಗನಿಗೆ ಟಿಕೆಟ್ ನೀಡಲಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡ ಬಂದ ಪದ್ಧತಿ ಎಂದು ಹೇಳಿದರು. ಗ್ಯಾರಂಟಿ ಯೋಜನೆ ಮೂಲಕ ಮತದಾರರ ಮೇಲೆ ಕಾಂಗ್ರೆಸ್ ಧಮ್ಕಿ ಹಾಕಿದ್ದಾರೆ ಎಂಬ ಬಿಜೆಪಿಗರ ಆರೋಪಕ್ಕೆ ಉತ್ತರಿಸಿದ ಅವರು, ಧಮ್ಕಿ ಹಾಕೋದು ಕಾಂಗ್ರೆಸ್ ಸಂಸ್ಕೃತಿ ಅಲ್ಲ. ಧಮ್ಕಿ ಹಾಕೋದು ಬಿಜೆಪಿಯವರು. ಬಾಗಲಕೋಟೆ ಬಿಜೆಪಿ ಎಂಎಲ್&zwnj;ಎಯಾದವರು ಯಾರನ್ನಾದರೂ ತಮ್ಮ ಮನೆಗೆ ಬಿಡ್ತಾರಾ? ಅವರು ಜನಪ್ರತಿನಿಧಿಯಾದವರು ಎಂದು ಪರೋಕ್ಷವಾಗಿ ವೀರಣ್ಣ ಚರಂತಿಮಠ ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/cm-siddaramaiah-reaction-yatnal-bjp-politics-karnataka-gvd/articleshow-fcdbgxg"/>
        </item>
        <item>
            <title><![CDATA[ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮೋದಿ ವಿರುದ್ಧ ಸಚಿವ ಎಂ.ಬಿ.ಪಾಟೀಲ ಕಿಡಿ]]></title>
            <link>https://kannada.asianetnews.com/politics/mb-patil-congress-achievements-modi-criticism-bagalkot-bypoll-gvd/articleshow-ghdhyvo</link>
            <guid isPermaLink="true">https://kannada.asianetnews.com/politics/mb-patil-congress-achievements-modi-criticism-bagalkot-bypoll-gvd/articleshow-ghdhyvo</guid>
            <pubDate>Mon, 30 Mar 2026 22:55:31 +0530</pubDate>
            <description><![CDATA[&lt;p&gt;ದೇಶದ ಜನರಿಗೆ ಸಂಪೂರ್ಣ ಆಹಾರ ಒದಗಿಸುವ ಆಹಾರ ಭದ್ರತೆ, ಉದ್ಯೋಗ ಖಾತರಿ, ಪಡಿತರ ಚೀಟಿ, ಪಿಂಚಣಿ ಯೋಜನೆಗಳು ಸೇರಿದಂತೆ ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದ ಕಾಂಗ್ರೆಸ್ ಪಕ್ಷ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7907669v3sy433fx9m4prw4,imgname-minister-mb-patil-1760165075145.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.30):&lt;/strong&gt; ಗುಂಡಿ ಸೂಜಿ ಉತ್ಪಾದನೆ ಆಗದಿದ್ದ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು ದೇಶದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು, ಸರ್ಕಾರದ ಸಂಸ್ಥೆಗಳು, ಬ್ಯಾಂಕ್ ರಾಷ್ಟ್ರೀಕರಣ, ದೇಶದ ಜನರಿಗೆ ಸಂಪೂರ್ಣ ಆಹಾರ ಒದಗಿಸುವ ಆಹಾರ ಭದ್ರತೆ, ಉದ್ಯೋಗ ಖಾತರಿ, ಪಡಿತರ ಚೀಟಿ, ಪಿಂಚಣಿ ಯೋಜನೆಗಳು ಸೇರಿದಂತೆ ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದ ಕಾಂಗ್ರೆಸ್ ಪಕ್ಷ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;&lt;p&gt;ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರವಾಗಿ ಮತಯಾಚನೆಗೆ ಆಗಮಿಸಿದ್ದ ಅವರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಸಿಕ್ಕಾಗಿ ನಮ್ಮ ದೇಶಕ್ಕೆ ಅಮೆರಿಕದಿಂದ ಗೋಧಿ ಬರುತ್ತಿತ್ತು. ಜವಹರಲಾಲ ನೆಹರು, ಲಾಲಬಹದ್ದೂರ್&zwnj; ಶಾಸ್ತ್ರಿ ಸೇರಿದಂತೆ ಕಾಂಗ್ರೆಸ್ ಸರ್ಕಾರ ದೂರದೃಷ್ಟಿಯ ಯೋಜನೆಗಳಿಂದ ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ, ಗರೀಬಿ ಹಠಾವೋ, 20 ಅಂಶಗಳ ಕಾರ್ಯಕ್ರಮಗಳು, ಪಂಚ ವಾರ್ಷಿಕ ಯೋಜನೆಗಳು ಜಾರಿಗೆ ತಂದು ದೇಶವನ್ನು ಸಮೃದ್ಧಿಗೊಳಿಸಿದರು ಎಂದು ಹೇಳಿದರು.&lt;/p&gt;&lt;p&gt;ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಎಚ್ಎಎಲ್, ಬಿಎಚ್ಎಲ್, ಬಿಇಎಂಎಲ್, ಇಸ್ರೋ, ಎಚ್ಎಂಟಿ ಸೇರಿದಂತೆ ಅನೇಕ ಸಂಸ್ಥೆಗಳು ಕಾಂಗ್ರೆಸ್ ಕೊಡುಗೆ. ನರೇಗಾ, ಆಧಾರ್&zwnj; ಕಾರ್ಡ ಸಹ ಕಾಂಗ್ರೆಸ್ ಕೊಡುಗೆ ಎಂದು ತಿಳಿಸಿದರು. ಇಂತಹ ಯಾವುದೇ ಕೆಲಸ ಮಾಡದ ನರೇಂದ್ರ ಮೋದಿ12 ವರ್ಷಗಳ ಕಾಲ ದೇಶ ನೆನಪಿಡುವ ಯಾವುದೇ ಕೆಲಸ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ವಾರ್ಷಿಕ 2 ಕೋಟಿ ಉದ್ಯೋಗ, ಎಲ್ಲರ ಖಾತೆಗೆ ₹15 ಲಕ್ಷ ಜಮಾ, ಅಚ್ಛೆ ದಿನ್ ಯಾವುದೂ ಮಾಡಲಿಲ್ಲ. ₹60 ಇದ್ದ ಪೆಟ್ರೋಲ್ ದರ ನೂರರ ಗಡಿ ದಾಟಿಸಿದರು.&lt;/p&gt;&lt;p&gt;₹400 ಇದ್ದ ಗ್ಯಾಸ್ ಬೆಲೆ ಸಾವಿರದ ಗಡಿಗೆ ಬಂತು. ನೋಟ್ ಬ್ಯಾನ್ ಮಾಡಿ ಕೋಟ್ಯಂತರ ಜನರ ಉದ್ಯೋಗ ಕಳೆದುಕೊಳ್ಳುವಂತೆ ಮಾಡಿದರು ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು. ಮನಮೋಹನ್ ಸಿಂಗ್ ಅವರು ದೇಶದ ರೈತರ ₹70 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಅವರು ₹20 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು, ಅದು ಯಾರದ್ದು ಅದಾನಿ, ಅಂಬಾನಿ ಸೇರಿದಂತೆ ದೊಡ್ಡ ದೊಡ್ಡ ಉದ್ಯಮಿಗಳ . ಡಾಲರ್ ರೇಟ್ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡಿದ್ದ ಮೋದಿ ಅವರು ಇದೀಗ ರೂಪಾಯಿ ಡಾಲರ್&zwnj; ಗೆ ₹94 ತಲುಪಿದ್ದರೂ ಆ ಬಗ್ಗೆ ಮಾತನಾಡಲ್ಲ ಎಂದು ಕುಟುಕಿದರು.&lt;/p&gt;&lt;p&gt;ಇರಾನ್ ಜೊತೆ ಭಾರತ ಒಳ್ಳೆಯ ಸಂಬಂಧ ಹೊಂದಿತ್ತು. ಮೋದಿ ಅವರು ಇಸ್ರೇಲ್&zwnj; ಗೆ ಹೋಗಿ ಭಾರತ ಜಗತ್ತಿನ ತಾಯಿ ಎಂದಿದ್ದು ಸರಿ. ಆದರೆ, ಇಸ್ರೇಲ್ ಜಗತ್ತಿನ ತಂದೆ ಅಂದು ಬಿಟ್ಟರು. ಮರು ದಿನವೇ ಯುದ್ಧ ಆರಂಭವಾಯಿತು. ಅದಾಗ್ಯೂ ಇರಾನ್ ಭಾರತ ನಮ್ಮ ಸ್ನೇಹಿತ ದೇಶ ಎಂದಿತು. ಹೀಗಾಗಿಯೇ ಇರಾನ್&zwnj;ನಿಂದ ಇಂದು ಇಂಧನ ಸಿಗುತ್ತಿದೆ, ಒಂದು ವೇಳೆ ಮೋದಿ ಮೇಲಿನ ಸಿಟ್ಟಿಗೆ ಇಂಧನ ಕೊಡದೇ ಇದ್ದಿದ್ದರೆ ನಮ್ಮ ದೇಶದ ಪರಿಸ್ಥಿತಿ ಇವತ್ತು ಏನಾಗುತ್ತಿತ್ತು? ಮೋದಿ ಅವರು ಆಡಳಿತದಲ್ಲಿ ಬರೀ ಇಂಥದ್ದೇ ಅದ್ವಾನಗಳು ಆಗಿವೆ ಎಂದು ಟೀಕಿಸಿದರು.&lt;/p&gt;&lt;p&gt;ಮೋದಿ ಅವರು ಈ ಹಿಂದೆ ತಾವು ಚಹಾ ಮಾರುವಾಗ ಚರಂಡಿ ಮೇಲೆ ಪೈಪ್ ಹಾಕಿ ಗ್ಯಾಸ್ ಉತ್ಪಾದನೆ ಮಾಡುತ್ತಿದ್ದರು ಎಂದು ಹೇಳಿದ್ದರು. ಇವತ್ತು ಮೋದಿ ಅವರ ವಿದೇಶಾಂಗ ನೀತಿ ನೋಡಿದರೆ ಈಗ ಚರಂಡಿ ಮೇಲೆ ಪೈಪ್ ಹಾಕಿ ಗ್ಯಾಸ್ ಉತ್ಪಾದನೆ ಮಾಡುವ ಸ್ಥಿತಿಗೆ ತಂದಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಅಜಯಕುಮಾರ ಸರನಾಯಕ, ಆನಂದ ನ್ಯಾಮಗೌಡ, ನಾಗರಾಜ ಹದ್ಲಿ ಮತ್ತಿತರರು ಇದ್ದರು.&lt;/p&gt;&lt;h2&gt;&lt;strong&gt;ಸಾಲ ಮಾಡಿಯಾದ್ರೂ ಯುಕೆಪಿ ಪೂರ್ಣ&lt;/strong&gt;&lt;/h2&gt;&lt;p&gt;ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನಕ್ಕೆ ನಮ್ಮ ಸರ್ಕಾರ ಎಕರೆಗೆ ₹30 ಮತ್ತು ₹40 ಲಕ್ಷ ಪರಿಹಾರ ನಿಗದಿ ಪಡಿಸಿ, ಆರಂಭಿಕ ₹400 ಕೋಟಿ ಹಂಚಿಕೆ ಮಾಡಲಾಗಿದೆ. ಬಜೆಟ್&zwnj; ನಲ್ಲಿ ₹3 ಸಾವಿರ ಕೋಟಿ ಇಟ್ಟಿದ್ದೇವೆ. ಪೂರಕ ಬಜೆಟ್&zwnj; ನಲ್ಲಿ ಇನ್ನೂ ಹೆಚ್ಚಿಗೆ ಹಣ ನೀಡುವಾಗಿ ಸಿಎಂ ಹೇಳಿದ್ದಾರೆ. ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಸಮರ್ಥಿಸಿಕೊಂಡರು.ವಿಜಯಪುರದಲ್ಲಿ 5 ವರ್ಷದಲ್ಲಿ ₹2 ಲಕ್ಷ ಕೋಟಿ ಕೊಡುವುದಾಗಿ ಹಾಗೂ ಇತ್ತೀಚೆಗೆ ನಾಲ್ಕು ವರ್ಷ ಬಜೆಟ್&zwnj; ನಲ್ಲಿ ವಾರ್ಷಿಕ ₹18 ಸಾವಿರ ಕೋಟಿ ಕೊಡುವ ಭರವಸೆ ಏನಾಯಿತು? ನೀವು ಜಲಸಂಪನ್ಮೂಲ ಸಚಿವರಾಗಿದ್ದಾಗ ಬಾಗಲಕೋಟೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ ವಸತಿಗೆ ಎಷ್ಟು ಕೋಟಿ ಕೊಟ್ಟಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಲು ಸಚಿವರು ತಡಬಡಾಯಿಸಿದರು. ಈ ಬಗ್ಗೆ ಸಾಕಷ್ಟು ಹಣ ಕೊಟ್ಟಿದ್ದೇನೆ. ಬೇಕಿದ್ದರೆ ನಿಮ್ಮ ಜೆ.ಟಿ. ಪಾಟೀಲರನ್ನು ಕೇಳಿ ಎಂದರೆ ವಿನಾಃ ಎಷ್ಟು ಹಣ ಒದಗಿಸಿದ್ದೇವೆ ಎನ್ನುವ ನಿಖರ ಮಾಹಿತಿ ನೀಡಲಿಲ್ಲ.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mb-patil-congress-achievements-modi-criticism-bagalkot-bypoll-gvd/articleshow-ghdhyvo"/>
        </item>
        <item>
            <title><![CDATA[ಸಚಿವ ವಿ. ಸೋಮಣ್ಣ ಭಾಷಣಕ್ಕೆ ಬಾಗಲಕೋಟೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ; ಉಪ ಚುನಾವಣೆಯಲ್ಲಿ ವಾಗ್ವಾದ!]]></title>
            <link>https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws</link>
            <guid isPermaLink="true">https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws</guid>
            <pubDate>Fri, 03 Apr 2026 20:49:48 +0530</pubDate>
            <description><![CDATA[&lt;p&gt;ಬಾಗಲಕೋಟೆಯ ಐಹೊಳೆ ಗ್ರಾಮದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಷಣ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ಬೈಕ್ ರೇಸ್ ಮತ್ತು ಕೇಕೆ ಹಾಕಿ ಗದ್ದಲ ಸೃಷ್ಟಿಸಿದ್ದರಿಂದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn9yngcyq8hq0p1v509tg1n5,imgname-bagalkot-by-election-1775229387165.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03): ರಾ&lt;/strong&gt;ಜ್ಯದಲ್ಲಿ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಐಹೊಳೆ ಗ್ರಾಮದಲ್ಲಿ ರಾಜಕೀಯ ಸಂಘರ್ಷವೊಂದು ನಡೆದಿದೆ. ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಯುವ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬಾಗಲಕೋಟೆ ಉಪಚುನಾವಣೆ ನಿಮಿತ್ತ ಐಹೊಳೆ ಗ್ರಾಮದಲ್ಲಿ ಬಿಜೆಪಿ ಮುಖಂಡರು ಬೃಹತ್ ಪ್ರಚಾರ ಸಭೆಯನ್ನು ಹಮ್ಮಿಕೊಂಡಿದ್ದರು. ವೇದಿಕೆಯ ಮೇಲೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕೆಲವು ಕಾಂಗ್ರೆಸ್ ಯುವ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಕಿರಿಕಿರಿ ಉಂಟುಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಬೈಕ್ ರೇಸ್ ಮತ್ತು ಕೇಕೆ:&lt;/strong&gt;&lt;/h2&gt;&lt;p&gt;ಸಚಿವ ವಿ. ಸೋಮಣ್ಣ ಅವರು ಭಾಷಣ ಮಾಡುತ್ತಿದ್ದಂತೆಯೇ, ಕಾಂಗ್ರೆಸ್ ಕಾರ್ಯಕರ್ತರು ಸಭೆಯ ಸುತ್ತಮುತ್ತ ಬೈಕ್ ರೇಸ್ ಮಾಡುತ್ತಾ ಭಾರಿ ಸದ್ದು ಮಾಡಿದ್ದಾರೆ. ಅಷ್ಟೇ ಅಲ್ಲದೆ, ಜೋರಾಗಿ ಕೇಕೆ ಹಾಕುವ ಮೂಲಕ ಸಚಿವರ ಭಾಷಣ ಯಾರಿಗೂ ಕೇಳಿಸದಂತೆ ಅಡ್ಡಿಪಡಿಸಿದ್ದಾರೆ. ಈ ವರ್ತನೆಯಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಯುವಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿಗೆ ನಾಂದಿ ಹಾಡಿತು.&lt;/p&gt;&lt;h3&gt;&lt;strong&gt;ಪೊಲೀಸರ ಮಧ್ಯಪ್ರವೇಶ:&lt;/strong&gt;&lt;/h3&gt;&lt;p&gt;ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿದರು. ಪರಿಸ್ಥಿತಿ ಕೈಮೀರಿ ಹೋಗುವ ಮುನ್ನವೇ ಗಲಾಟೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿ ಕಳಿಸಿದರು. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಸಂಘರ್ಷ ತಪ್ಪಿದಂತಾಗಿದೆ. ಉಪಚುನಾವಣಾ ಕಣದಲ್ಲಿ ಇಂತಹ ಘಟನೆಗಳು ಜಿದ್ದಾಜಿದ್ದಿನ ರಾಜಕೀಯಕ್ಕೆ ಸಾಕ್ಷಿಯಾಗುತ್ತಿವೆ. ಐಹೊಳೆ ಗ್ರಾಮದಲ್ಲಿ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಚುನಾವಣಾ ಪ್ರಚಾರ ಕಾರ್ಯ ಮುಂದುವರಿದಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಈ ಸಂಘರ್ಷ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws"/>
        </item>
        <item>
            <title><![CDATA[ಪ್ರಧಾನಿ ಮೋದಿಯವರು ಸಾಲಮನ್ನಾ ಮಾಡಿದ್ದಾರಾ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ]]></title>
            <link>https://kannada.asianetnews.com/politics/cm-siddaramaiah-speech-bagalkote-umesh-meti-election-campaign-gvd/articleshow-i4uods5</link>
            <guid isPermaLink="true">https://kannada.asianetnews.com/politics/cm-siddaramaiah-speech-bagalkote-umesh-meti-election-campaign-gvd/articleshow-i4uods5</guid>
            <pubDate>Tue, 31 Mar 2026 21:27:36 +0530</pubDate>
            <description><![CDATA[&lt;p&gt;₹72 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಪ್ರಧಾನಿ ನರೇಂದ್ರ ಮೋದಿಯವರು ಸಾಲಮನ್ನಾ ಮಾಡಿದ್ದಾರಾ? ಅವರಿಗೆ ಯಾಕೆ ಮತ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9vtjh8b9psgnknzjtxcznze,imgname-cm-siddaramaiah-1762944173322.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.31):&lt;/strong&gt; ನಾವು 2023ರ ಚುನಾವಣೆ ವೇಳೆ ಒಟ್ಟು 165 ಭರವಸೆ ಕೊಟ್ಟಿದ್ದೇವು. ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ₹72 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಪ್ರಧಾನಿ ನರೇಂದ್ರ ಮೋದಿಯವರು ಸಾಲಮನ್ನಾ ಮಾಡಿದ್ದಾರಾ? ಅವರಿಗೆ ಯಾಕೆ ಮತ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.&lt;/p&gt;&lt;p&gt;ಬಾಗಲಕೋಟೆ ತಾಲೂಕಿನ ಸುತಗುಂಡಾರದಲ್ಲಿ ಕಾಂಗ್ರೆಸ್&zwnj; ಅಭ್ಯರ್ಥಿ ಉಮೇಶ ಮೇಟಿ ಪರ ಭರ್ಜರಿ ಪ್ರಚಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರೆ ಯಾರೂ ಕಿವಿಗೊಡಬೇಡಿ. ಈ ಭಾಗದಲ್ಲಿ ಎಚ್.ವೈ.ಮೇಟಿ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಸ್ಥಾನಕ್ಕೆ ಉಮೇಶ ಮೇಟಿ ಅವರಿಗೆ ಅವಕಾಶ ನೀಡಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.&lt;/p&gt;&lt;p&gt;ಕೊರೋನಾದಿಂದ ಕಂಗೆಟ್ಟಿದ್ದ ರಾಜ್ಯದ ಜನರನ್ನು ಐದು ಗ್ಯಾರಂಟಿಗಳ ಮೂಲಕ ಮೇಲೆತ್ತುವ ಕೆಲಸ ಮಾಡಿದ್ದೇವೆ. ಏಳು ಕೋಟಿ ಜನರಲ್ಲಿ ಮೂರೂವರೆ ಕೋಟಿಯಷ್ಟು ಮಹಿಳೆಯರಿದ್ದು, ಅವರನ್ನು ಸ್ವಾವಲಂಬಿಯಾಗಿ ಮಾಡಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯ ಲಾಭ ಒಂದು ಕೋಟಿ ಇಪ್ಪತ್ತಾರು ಲಕ್ಷ ಮಹಿಳೆಯರಿಗೆ ತಲುಪುತ್ತಿದೆ. ಈವರೆಗೆ ಜನರಿಗೆ ಒಂದು ಲಕ್ಷ ನಲವತ್ತು ಸಾವಿರ ಕೋಟಿ ರುಪಾಯಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೀಡಿದ್ದೇವೆ ಎಂದು ಪ್ರತಿಪಾದಿಸಿದರು.&lt;/p&gt;&lt;p&gt;ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಡ್ಯಾಂ ಎತ್ತರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೋಟಿಫಿಕೇಶನ್&zwnj; ಹೊರಡಿಸಿದರೆ ನಾವು ಎರಡೇ ವರ್ಷದಲ್ಲಿ ಡ್ಯಾಂ ಎತ್ತರಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಯುಕೆಪಿಗೆ ಸಂಬಂಧಿಸಿದ ಯಾವ ಕೆಲಸವನ್ನು ಮಾಡಿಲ್ಲ. ಹದಿಮೂರು ವರ್ಷ ಕಳೆದರೂ ಕೇಂದ್ರ ಸರ್ಕಾರ ನೋಟಿಫಿಕೇಶನ್&zwnj; ಹೊರಡಿಸುತ್ತಿಲ್ಲ. ಯಾವ ಮುಖ ಹೊತ್ತು ಈ ಭಾಗದಲ್ಲಿ ಮತ ಕೇಳಲು ಬಿಜೆಪಿಯರು ಬರುತ್ತಾರೆ ಎಂದು ಸಿಎಂ ಪ್ರಶ್ನಿಸಿದರು.&lt;/p&gt;&lt;p&gt;ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸದೇ ಡ್ಯಾಂ ಎತ್ತರಿಸಲು ಸಾಧ್ಯವಿಲ್ಲ. ಅವರು ನೋಟಿಫಿಕೇಶನ್ ಹೊರಡಿಸಿದರೆ, ನಾವು ಮುಂದಿನ ಕೆಲಸ ಮಾಡುತ್ತೇವೆ. ಎರಡು ವರ್ಷದಲ್ಲಿ ಪೂರ್ಣ ಯೋಜನೆ ಮುಗಿಸುತ್ತೇವೆ ಎಂದು ಸಿಎಂ ಭರವಸೆ ನೀಡಿದರು. ಬಿಜೆಪಿಯವರು ಪ್ರಚಾರಕ್ಕೆ ಬಂದಾಗ ನೋಟಿಫಿಕೇಶನ್&zwnj; ಯಾಕೆ ಹೊರಡಿಸಿಲ್ಲ?, ಅದನ್ನು ಹೊರಡಿಸಿ ನಮ್ಮೂರಿಗೆ ಬನ್ನಿ ಎಂದು ಮತದಾರರು ಕೇಳಲಿ. ಆಗಲಾದರೂ ಬಿಜೆಪಿಯವರಿಗೆ ಬುದ್ಧಿ ಬರುತ್ತದೆ ಎಂದು ಅವರು ಕಿಡಿಕಾರಿದರು.&lt;/p&gt;&lt;h2&gt;&lt;strong&gt;ಉಮೇಶ ಮೇಟಿ ಪರ ಸಿಎಂ ಭರ್ಜರಿ ಪ್ರಚಾರ&lt;/strong&gt;&lt;/h2&gt;&lt;p&gt;ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್&zwnj; ಅಭ್ಯರ್ಥಿ ಉಮೇಶ ಮೇಟಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭರ್ಜರಿ ಪ್ರಚಾರ ನಡೆಸಿದರು. ತಾಲೂಕಿನ ಸುತಗುಂಡಾರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಆರತಿ ಬೆಳಗಿ ಸಾಂಪ್ರದಾಯಿಕ ಸ್ವಾಗತ ಕೋರಿದರು. ಈ ವೇಳೆ, ಸಿಎಂ ಸಮ್ಮುಖದಲ್ಲಿ ಅನೇಕ ಜನರು ಕಾಂಗ್ರೆಸ್ ಗೆ ಸೇರ್ಪಡೆಯಾದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/cm-siddaramaiah-speech-bagalkote-umesh-meti-election-campaign-gvd/articleshow-i4uods5"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ಯಾವ ನೆಲೆಗಟ್ಟಿನ ಮೇಲೆ ಮತ ಕೇಳ್ತಾರೆ: ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯ]]></title>
            <link>https://kannada.asianetnews.com/politics/sriramulu-slams-siddaramaiah-bagalkot-bypoll-loan-criticism-gvd/articleshow-k7tlwv3</link>
            <guid isPermaLink="true">https://kannada.asianetnews.com/politics/sriramulu-slams-siddaramaiah-bagalkot-bypoll-loan-criticism-gvd/articleshow-k7tlwv3</guid>
            <pubDate>Mon, 30 Mar 2026 22:27:49 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ಅವರು ಬಾಗಲಕೋಟೆಗೆ ಪ್ರಚಾರಕ್ಕೆ ಬರ್ತಿದ್ದಾರೆ. ಯಾವ ನೆಲೆಗಟ್ಟಿನ ಮೇಲೆ ಮತ ಕೇಳುತ್ತೀರಿ ಎಂದು ಅವರನ್ನು ಕೇಳುತ್ತಿದ್ದಿನಿ. ನಾನು ಬಹಳಷ್ಟು ಸಾಲ ಮಾಡಿದ್ದಿನಿ ಎಂದು ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k79trzrtmne3aemcfth8n1va,imgname-fefe-1760192921369.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮಾ.30): &lt;/strong&gt;ಸಿದ್ದರಾಮಯ್ಯ ಅವರು ಬಾಗಲಕೋಟೆಗೆ ಪ್ರಚಾರಕ್ಕೆ ಬರ್ತಿದ್ದಾರೆ. ಯಾವ ನೆಲೆಗಟ್ಟಿನ ಮೇಲೆ ಮತ ಕೇಳುತ್ತೀರಿ ಎಂದು ಅವರನ್ನು ಕೇಳುತ್ತಿದ್ದಿನಿ. ನಾನು ಬಹಳಷ್ಟು ಸಾಲ ಮಾಡಿದ್ದಿನಿ ಎಂದು ಹೇಳಿ ಮತ ಕೇಳುತ್ತಾರೆ ನೋಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.&lt;/p&gt;&lt;p&gt;ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮುಂದೆ ಹುಟ್ಟುವಂತಹ ಮಕ್ಕಳ ಮೇಲೂ ಸಾಲ ಹೊರಿಸಿದ್ದಾರೆ. ಯಾರೂ ಮಾಡದ ಸಾಲವನ್ನು ಇವರು ಮಾಡಿದ್ದಾರೆ. ₹89 ಸಾವಿರ ಕೋಟಿ ಸಾಲಕ್ಕೆ ಬಡ್ಡಿ ಕಟ್ತೀನಿ ಎಂದು ಹೇಳಿ ಮತ ಕೇಳುತ್ತಿದ್ದಾರೆ. ಹೈಕಮಾಂಡ್ ಮೆಚ್ಚುವ ಕೆಲಸ ಮಾಡುತ್ತಿದ್ದಾರೆ, ಸಿಎಂ ಸಿದ್ದರಾಮಯ್ಯ ಎಲ್ಲವನ್ನೂ ನುಂಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಗ್ಯಾರಂಟಿ ಜೊತೆಯಲ್ಲಿ ಎಲ್ಲ ದಿನಸಿಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿದ್ರಿ, ವಾಪಸ್&zwnj; ಕಟ್ತೀನಿ ಅಂದ್ರಿ ಕಟ್ಟಿಲ್ಲ, 139 ಜನ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಅವಕಾಶ ನೀಡಿದ್ದೀನಿ ಎಂದು ಮತ ಕೇಳ್ತಾರಾ, ಸಿಎಂ ಏನು ಅಜೆಂಡಾ ಇಟ್ಟುಕೊಂಡು ಮತ ಕೇಳ್ತಾರೆ ನೋಡಬೇಕು. ಎರಡು ವರ್ಷಗಳ ಕಾಲ ಮಾಡಿದ ದುರಾಡಳಿತಕ್ಕೆ ನಮ್ಮ ಸವಾಲ್ ಇದು, ನಮ್ಮ ಸವಾಲ್ ಗೆ ಸಿಎಂ ಉತ್ತರ ಕೊಟ್ಟು ಮತ ಕೇಳಲಿ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಕಾಂಗ್ರೆಸ್ ಗ್ಯಾರಂಟಿಗೆ ಮರುಳಾಗದೆ ಬಿಜೆಪಿಗೆ ಮತ ನೀಡಿ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ನೀಡುತ್ತಿರುವ ಗ್ಯಾರಂಟಿಗಳಿಗೆ ಮರುಳಾಗದೆ ಮತದಾರರು ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 2023ರಲ್ಲಿ ಆದ ತಪ್ಪನ್ನು ಮತ್ತೆ ಮಾಡದೆ ತಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ಆಯ್ಕೆ ಮಾಡಬೇಕು ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಮನವಿ ಮಾಡಿದರು. ಪಟ್ಟಣದಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಮತಯಾಚನೆ ಮಾಡಿ ನಂತರ ಗಾಂಧಿ ಚೌಕದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.&lt;/p&gt;&lt;p&gt;ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಎರಡುವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಕೇವಲ ಭ್ರಷ್ಟಾಚಾರದಲ್ಲಿ ಮುಳಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದ್ದು, ಬಾಗಲಕೋಟೆ ಮತಕ್ಷೇತ್ರದ ಜನತೆ ತಾವು ನೀಡುತ್ತಿರುವ ಗ್ಯಾರಂಟಿಗಳಿಗೆ ಮರಳಾಗುವುದಿಲ್ಲ, ಆದ್ದರಿಂದ ವೀರಣ್ಣ ಚರಂತಿಮಠ ಅವರು ತಮ್ಮ ಅವಧಿಯಲ್ಲಿ ಕಮತಗಿ ಪಟ್ಟಣ ಸೇರಿದಂತೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮತದಾರರಲ್ಲಿ ಮತಯಾಚಿಸಿದರು.&lt;/p&gt;&lt;p&gt;ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭ್ರಮೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ರಾಜ್ಯದ ಜನತೆಯನ್ನು ಸಾಲದ ಕೂಪಕ್ಕೆ ತಳ್ಳುತ್ತಿದ್ದು, ಆದ್ದರಿಂದ ಕ್ಷೇತ್ರದ ಜನತೆ ಮತ್ತೊಮ್ಮೆ ಗ್ಯಾರಂಟಿಗೆ ಮರುಳಾಗದೆ. ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ಮತಯಾಚಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/sriramulu-slams-siddaramaiah-bagalkot-bypoll-loan-criticism-gvd/articleshow-k7tlwv3"/>
        </item>
        <item>
            <title><![CDATA[ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು]]></title>
            <link>https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers</link>
            <guid isPermaLink="true">https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers</guid>
            <pubDate>Fri, 03 Apr 2026 23:51:13 +0530</pubDate>
            <description><![CDATA[&lt;p&gt;ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03): &lt;/strong&gt;ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ.&lt;/p&gt;&lt;p&gt;ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾಗಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: &lt;/strong&gt;ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುವುದಿಲ್ಲ. ಹೀಗಾಗಿ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ ಯತ್ನಾಳ ಅವರನ್ನೇ ಗೊಗರೆದು ಕರೆತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದ ಅವರು, ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.&lt;/p&gt;&lt;p&gt;ಲೋಕಸಭಾ ಸ್ಥಾನ ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜನಸಂಖ್ಯೆಗೆ ಅನುಗುಣವಾಗಿ ಸ್ಥಾನ ಹೆಚ್ಚಿಸಬೇಕು. ಆದರೆ ಮಲತಾಯಿ ಧೋರಣೆ ಮಾಡಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವುದಕ್ಕೆ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.&lt;/p&gt;&lt;h2&gt;&lt;strong&gt;ಎರಡೂ ಕಡೆ ಗೆಲುವು ನಮ್ಮದೆ&lt;/strong&gt;&lt;/h2&gt;&lt;p&gt;ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಬಜೆಟ್&zwnj;ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು. ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಎಂದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers"/>
        </item>
        <item>
            <title><![CDATA[ಆರ್ಥಿಕ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು: ಬೊಮ್ಮಾಯಿ ವಾಗ್ದಾಳಿ]]></title>
            <link>https://kannada.asianetnews.com/politics/karnataka-bypolls-former-cm-basavaraj-bommai-slams-siddaramaiah-govt-at-bagalkote-rav/articleshow-t7g51fv</link>
            <guid isPermaLink="true">https://kannada.asianetnews.com/politics/karnataka-bypolls-former-cm-basavaraj-bommai-slams-siddaramaiah-govt-at-bagalkote-rav/articleshow-t7g51fv</guid>
            <pubDate>Sun, 29 Mar 2026 13:16:47 +0530</pubDate>
            <description><![CDATA[&lt;p&gt;ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಈ ಭಾಗದ ಜನರಿಗೆ ಅನ್ಯಾಯ ಮಾಡಿದೆ ಹಾಗೂ ಗ್ಯಾರಂಟಿ ಯೋಜನೆಗಳಿಗಾಗಿ ಸಾಲ ಮಾಡಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmw8qdfgzgxxrf4tdvy6fr7z,imgname---------------------1774770173424.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬಾಗಲಕೋಟೆ (ಮಾ.29): &lt;/strong&gt;ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವ ಅಪಖ್ಯಾತಿ ಸಿದ್ದರಾಮಯ್ಯ ಸರ್ಕಾರಕ್ಕಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಚಾರದಲ್ಲಿ ವಾರ್ಷಿಕ ₹18 ಸಾವಿರ ಕೋಟಿ ನೀಡುವುದಾಗಿ ಹೇಳಿ ಬಜೆಟ್&zwnj; ನಲ್ಲಿ ಕೇವಲ ₹3 ಸಾವಿರ ಕೋಟಿ ಮೀಸಲಿಟ್ಟು, ಈ ಭಾಗದ ಜನರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ. ಇದು ಕ್ಷಮೆಗೆ ಅರ್ಹವಲ್ಲ ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.&lt;/p&gt;&lt;p&gt;ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಗೂ ಈಗ ನಡೆಯುತ್ತಿರುವ ಚುನಾವಣೆಗೂ ಬಹಳಷ್ಟು ರಾಜಕೀಯ ಬದಲಾವಣೆ ಆಗಿದೆ. ಸರ್ಕಾರದ ಬಗ್ಗೆ ಜನರ ನಿರೀಕ್ಷೆ ಹುಸಿಯಾಗಿದೆ. ಜನರಿಗೆ ಭ್ರಮನಿರಸನ ಆಗಿದೆ. ಈಗಾಗಲೇ ₹4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇನ್ನು ಮೂರು ಬಜೆಟ್ ಮಂಡಿಸಿದರೆ ಹೊಸದಾಗಿ ₹6-7 ಲಕ್ಷ ಕೋಟಿ ಸಾಲ ರಾಜ್ಯದ ಜನರ ಮೇಲೆ ಹೊರಿಸುತ್ತಾರೆ. ಅದನ್ನು ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.&lt;/p&gt;&lt;h2&gt;ಸಿಎಂ ಉದ್ಧಟತನ:&lt;/h2&gt;&lt;p&gt;ತಾವು ಕೆಲವು ತಪ್ಪು ಮಾಡಿದ್ದಾರೆ. ಜಲ ಜೀವನ ಮಿಷನ್ ಸರಿಯಾಗಿ ಜಾರಿ ಮಾಡಿಲ್ಲ. ಅನೇಕ ಯೋಜನೆಗಳಿಗೆ ರಾಜ್ಯದ ಪಾಲಿನ ಹಣ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಯುದ್ಧದ ಪರಿಣಾಮವಾಗಿ ಅಬಕಾರಿ ತೆರಿಗೆ ಕಡಿಮೆ ಮಾಡಿದ್ದಾರೆ. ಬೇರೆ ದೇಶಗಳಲ್ಲಿ ಆರ್ಥಿಕ ವ್ಯವಹಾರ ನಿಂತು ಹೋಗಿದೆ. ಭಾರತದಲ್ಲಿ ಯಾವುದೇ ತೊಂದರೆಯಾಗಿಲ್ಲ. ಎಲ್ಲರ ಸಹಕಾರ ಬೇಕು ಎಂದು ಸಿಎಂಗಳ ಸಭೆ ಕರೆದರೆ ಆ ಸಭೆಗೆ ಹೋಗದೇ ಮಂತ್ರಿಗಳನ್ನು ಕಳುಹಿಸಿ ಉದ್ಧಟತನ ಮೆರೆಯುತ್ತಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕೇರಳ ಸಿಎಂ ಹಾಗೂ ಪ್ರತಿಪಕ್ಷಗಳ ಸಿಎಂಗಳು ಪ್ರಧಾನಿ ಸಭೆಗೆ ಹೋಗಿದ್ದಾರೆ. ಸಿದ್ದರಾಮಯ್ಯ ನೀತಿ ಆಯೋಗದ ಸಭೆಗೂ ಹೋಗುವುದಿಲ್ಲ. ರಾಜ್ಯದ ಹಿತ ಕಾಯುವ ಜವಾಬ್ದಾರಿ ಇರುವವರು ತಮ್ಮ ಕರ್ತವ್ಯ ಲೋಪ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;h3&gt;ಹೆಚ್ಚಿನ ಅನುದಾನ&lt;/h3&gt;&lt;p&gt;ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ, ಕಾರಜೋಳ ನೀರಾವರಿ ಮಂತ್ರಿಯಾಗಿದ್ದಾಗ ನಾನು ಸಿಎಂ ಆಗಿದ್ದಾಗ ಬಾಗಲಕೋಟೆಗೆ ಹೆಚ್ಚಿನ ಅನುದಾನ ನೀಡಿದ್ದೇವೆ. ಈಗ ಮೇಟಿಯವರ ಕೊನೆಯ ಆಸೆಯಂತೆ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಹೇಳುತ್ತಾರೆ. ಅವರು ಜೀವಂತ ಇದ್ದಾಗ ಯಾಕೆ ಮಾಡಲಿಲ್ಲ. ನಾವಿದ್ದಾಗ ನಾಲ್ಕು ಮೆಡಿಕಲ್ ಕಾಲೇಜು ಮಾಡಿದ್ದೇವು. ಇವರ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಈಗ ಚುನಾವಣೆ ಸಂದರ್ಭದಲ್ಲಿ ದುಡ್ಡು ಬಳಸಿ ಮೆಡಿಕಲ್ ಕಾಲೇಜು ಮಾಡುವುದಾಗಿ ಹೇಳುತ್ತಿದ್ದಾರೆ. 2023 ರ ಚುನಾವಣೆಗೂ 2026ರ ಚುನಾವಣೆಗೆ ಬಹಳ ವ್ಯತ್ಯಾಸ ಇದೆ. ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದೆ. ಅವರು ಹಣ ಚೆಲ್ಲುತ್ತಾರೆ. ಈಗ ರಾಜಶಕ್ತಿ ಪ್ರಜಾಶಕ್ತಿ ನಡುವೆ ಸಂಘರ್ಷ ನಡೆಯುತ್ತಿದೆ. ಇದರಲ್ಲಿ ಪಜಾಶಕ್ತಿ ಗೆಲ್ಲುತ್ತದೆ. ಈ ಚುನಾವಣೆಯನ್ನು ಜನ ಸಾಮಾನ್ಯರು, ನಮ್ಮ ಕಾರ್ಯಕರ್ತರೇ ಮಾಡುತ್ತಾರೆ ಎಂದು ಹೇಳಿದರು.&lt;/p&gt;&lt;p&gt;ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಬಸವರಾಜ ಬೊಮ್ಮಾಯಿ ಹಾಗೂ ಎಚ್.ಡಿ. ಕುಮಾರಸ್ವಾಮಿ ತಮ್ಮ ಕ್ಷೇತ್ರದಲ್ಲಿಯೇ ಗೆಲ್ಲಲು ಆಗಲಿಲ್ಲ, ಈ ಉಪ ಚುನಾವಣೆಯಲ್ಲಿ ಹೇಗೆ ಗೆಲ್ಲುತ್ತಾರೆ ಎಂದು ಪಶ್ನಿಸಿದ್ದಾರಲ್ಲ ಎಂದು ಪ್ರಶ್ನೆಗೆ ಸಿಎಂ ಆಗಿಯೇ ಸಿದ್ದರಾಮಯ್ಯ 30 ಸಾವಿರ ಅಂತರದಿಂದ ಸೋತಿದ್ದಾರೆ. ನಾವು ನಾಲೈದು ಬಾರಿ ನಮ್ಮ ಕ್ಷೇತ್ರದಲ್ಲಿ ಗೆದ್ದಿದ್ದೇವೆ. ಬಾದಾಮಿ ಜನ ಅವರ ಕೈ ಹಿಡಿದರು. ಅವರು ಮತ್ತೊಮ್ಮೆ ಬಾದಾಮಿಗೆ ಯಾಕೆ ಬರಲಿಲ್ಲ. ಈ ಸರ್ಕಾರದ ಬಳಿ ಹಣ ಇಲ್ಲ. ನಾವು ಜಮೀನು ವಶಪಡಿಸಿಕೊಳ್ಳುವುದಿಲ್ಲ. ಮುಳುಗಡೆ ಮಾಡಿ ಕೊಡುವುದಿಲ್ಲ ಎಂದು ಹೇಳಿದ್ದರು. ಈಗ ಸ್ಕಿನ್ ಗೇಟ್ ಹಾಕುತ್ತೇವೆ ಎನ್ನುತ್ತಾರೆ. ನೀರು ಹಿಡಿಯದಿದ್ದರೆ ರೈತರಿಗೆ ಏನು ಪ್ರಯೋಜನ. ಇಷ್ಟು ಬಹಿರಂಗವಾಗಿ ಜನರಿಗೆ ದಾರಿ ತಪ್ಪಿಸುವ ಕೆಲಸ ಈ ಸಕಾರ ಮಾಡುತ್ತಿದೆ. ಯುಪಿಎ ಸರ್ಕಾರ ಆರ್ ಆಂಡ್ ಆರ್ ಪಾಲಿಸಿ ಇದೆ. ಅದರ ಪಕಾರ ಇವರು ಕೆಲಸ ಮಾಡಬೇಕು. ಸಂಪೂರ್ಣ ಆರ್. ಆಂಡ್ ಆರ್ ಕೆಲಸ ಮುಗಿಸಿ ಆರು ತಿಂಗಳ ನಂತರ ನೀರು ಹಿಡಿದು ಯೋಜನೆ ಕಾರ್ಯಗತ ಮಾಡಬೇಕೆಂಬ ನಿಯಮವಿದೆ. ಅದನ್ನು ಮಾಡಲು ₹75 ಸಾವಿರ ಕೋಟಿ ಬೇಕು. ಮತ್ತೆ ಇವರು ನ್ಯಾಯ ಒದಗಿಸಿಕೊಡುತ್ತೇವೆ ಎಂದು ಹೇಳುತ್ತಾರೆ ಎಂದು ಹೇಳಿದರ.&lt;/p&gt;&lt;p&gt;ಆಲಮಟ್ಟಿ ಡ್ಯಾಂ ಎತರ ಹೆಚ್ಚಳದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರು ರಾಜ್ಯಗಳ ವ್ಯಾಜ್ಯ ಇದೆ. ಎರಡು ರಾಜ್ಯಗಳ ವಾದ ಮಂಡನೆಯಾಗಿದೆ. ಕೋರ್ಟಲ್ಲಿರುವ ಪ್ರಕ್ರಿಯೆಗೆ ಕರ್ನಾಟಕ ವಕೀರಲು ಏನು ಮಾಡಿದ್ದಾರೆ. ಡ್ಯಾಮ್ ಎತ್ತರ 524 ಮೀಟರ್ ಎತ್ತರ ಮಾಡುವ ಕುರಿತು ಮಹಾರಾಷ್ಟ್ರದವರು ಸುಪ್ರೀಂ ಕೋರ್ಟನಲ್ಲಿ ಅರ್ಜಿ ಹಾಕಿದ್ದರು. ಅದನ್ನು ನಾನು ಸದನದಲ್ಲಿ ಹೇಳಿದಾಗ ಇವರು ಅಫಿಡವಿಟ್ ಹಾಕಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ಗ್ಯಾರೆಂಟಿ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರೆಂಟಿ ಯೋಜನೆಗಳು ಸ್ವಂತ ಆರ್ಥಿಕ ಬಲವರ್ಧನೆ ಮಾಡಿ ಎಷ್ಟಾದರೂ ಕೊಡಲಿ, ಎಲ್ಲ ಅಭಿವೃದ್ಧಿ ನಿಲ್ಲಿಸಿ ಸಾಲ ಮಾಡಿ ಯಾವುದೇ ರೀತಿಯ ಅಭಿವೃದ್ಧಿ ಮಾಡದ ಪರಿಸ್ಥಿತಿಗೆ ತಂದರೆ ಯಾವ ಗ್ಯಾರೆಂಟಿ ಬಂದರೇನು ಎಂದು ಪ್ರಶ್ನಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಹಾಜರಿದ್ದರು.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-bypolls-former-cm-basavaraj-bommai-slams-siddaramaiah-govt-at-bagalkote-rav/articleshow-t7g51fv"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಗೆಲ್ಲುತ್ತೆ ಎಂಬ ಭಯ ಶುರು: ಬಿ.ವೈ.ವಿಜಯೇಂದ್ರ]]></title>
            <link>https://kannada.asianetnews.com/politics/by-vijayendra-attack-siddaramaiah-bjp-win-confidence-karnataka-gvd/articleshow-v09oacv</link>
            <guid isPermaLink="true">https://kannada.asianetnews.com/politics/by-vijayendra-attack-siddaramaiah-bjp-win-confidence-karnataka-gvd/articleshow-v09oacv</guid>
            <pubDate>Fri, 03 Apr 2026 20:34:15 +0530</pubDate>
            <description><![CDATA[&lt;p&gt;ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jqt8s7et6wcqxt5tk7h4aepm,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಏ.03):&lt;/strong&gt; ಕಳೆದ ಒಂದು ವಾರದಿಂದ ಬಾಗಲಕೋಟೆ ನಗರ, ಗ್ರಾಮಾಂತರ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲಾ ಮುಖಂಡರ ಜೊತೆ ಪ್ರವಾಸ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.&lt;/p&gt;&lt;p&gt;ದಾವಣಗೆರೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೋಸ ಮಾಡಿರುವುದು ಮನವರಿಕೆ ಅಗಿದೆ. ಬೇರೆ ಬೇರೆ ಕಾರಣಕ್ಕೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದು ಸಿದ್ದರಾಮಯ್ಯ ಅವರ ಹತಾಶೆಯಲ್ಲೇ ಗೊತ್ತಾಗುತ್ತದೆ ಎಂದು ಹೇಳಿದರು. ಬಿ.ವೈ.ವಿಜಯೇಂದ್ರ ಸಫಲರಾಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಾನು ಸಫಲ ಅನ್ನೋದಕ್ಕಿಂತ ಕಾರ್ಯಕರ್ತರು- ಮುಖಂಡರ ಶ್ರಮ ಇದೆ. ಇದನ್ನು ನೋಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಯಭೀತರಾಗಿದ್ದಾರೆ ಎಂದು ತಿರುಗೇಟು ನೀಡಿದರು.&lt;/p&gt;&lt;p&gt;ಗ್ಯಾರಂಟಿಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಭರವಸೆ ಹೋಗಿದೆ. ಬಾಗಲಕೋಟೆಯಲ್ಲಿ 15ಕ್ಕೂ ಹೆಚ್ಚು ಸಚಿವರು ಸೂಟ್ ಕೇಸ್ ಸಹಿತ ಬಂದಿದ್ದಾರೆ. ದಾವಣಗೆರೆಯಲ್ಲೂ ಬಂದು ಹೋಗಿದ್ದಾರೆ. ಇದು ಯಾವುದೇ ಕಾರಣಕ್ಕೂ ಮತದಾರರ ಮೇಲೆ ಪರಿಣಾಮ ಬೀರಲ್ಲ. ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದರು. ಯತ್ನಾಳ್ ಅವರಿಂದ ಬಿಜೆಪಿ ಪರ ಪ್ರಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಗಲಕೋಟೆಯಲ್ಲಿ ಬಿಜೆಪಿ ಗೆದ್ದಾಗಿದೆ. ನಮ್ಮ ಅಭ್ಯರ್ಥಿ ಅಂತರ ಹೆಚ್ಚಾಗುತ್ತೇ ಅಂದರೆ ಆಗಲಿ ಬಿಡಿ. ಬಹಳ ಸಂತೋಷ ಎಂದರು.&lt;/p&gt;&lt;h2&gt;&lt;strong&gt;ರಾಜ್ಯದ ಆರ್ಥಿಕ ಸ್ಥಿತಿ ಬದಲಾಗಲ್ಲ&lt;/strong&gt;&lt;/h2&gt;&lt;p&gt;ಎರಡು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೊರಗಡೆ ಸಾರ್ವಜನಿಕ ಸಭೆಯಲ್ಲಿ ಏನು ಬೇಕಾದರೂ, ಹೇಳಬಹುದು.&zwnj; ಆದರೆ, ಇದೇ ಮಾತನ್ನು ಸದನದಲ್ಲಿ ಹೇಳುವ ಎದೆಗಾರಿಕೆ ಅವರಿಗೆ ಇಲ್ಲ. ಬಿಜೆಪಿ ಎಷ್ಟು ಕೇಳಿದ್ರೂ ಸದನದಲ್ಲಿ ಹೇಳಲಿಲ್ಲ. ಸಿಎಂ ಇರುತ್ತಾರಾ, ಬದಲಾಗುತ್ತಾರ ಗೊತ್ತಿಲ್ಲ. ಮುಖ್ಯಮಂತ್ರಿ ಇದ್ದರೂ, ಬದಲಾದರೂ ರಾಜ್ಯದ ಆರ್ಥಿಕ ಸ್ಥಿತಿ ಬದಲಾಗಲ್ಲ ಎಂದು&zwnj; ಕುಟುಕಿದರು. ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲೋದು ಶತಸಿದ್ಧ. ಸರ್ಕಾರಕ್ಕೆ ಯಾವ ರೀತಿ ಪರಿಣಾಮ ಬರುತ್ತೇ ಅಂತ ನಾನು ಹೇಳಲ್ಲ. ಅದು ಅವರ ಆಂತರಿಕ ವಿಚಾರ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/by-vijayendra-attack-siddaramaiah-bjp-win-confidence-karnataka-gvd/articleshow-v09oacv"/>
        </item>
        <item>
            <title><![CDATA[ಧಮ್ಕಿ ಹಾಕಿ ಮತ ಪಡೆಯುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ]]></title>
            <link>https://kannada.asianetnews.com/politics/chalavadi-narayanaswamy-attack-congress-bagalkot-election-gvd/articleshow-y0ct9ul</link>
            <guid isPermaLink="true">https://kannada.asianetnews.com/politics/chalavadi-narayanaswamy-attack-congress-bagalkot-election-gvd/articleshow-y0ct9ul</guid>
            <pubDate>Wed, 01 Apr 2026 19:45:20 +0530</pubDate>
            <description><![CDATA[&lt;p&gt;ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಕಾಂಗ್ರೆಸ್&zwnj;ನವರು ಧಮ್ಕಿ ಹಾಕಿ ಮತ ಪಡೆಯಲು ಹೊರಟಿದ್ದಾರೆ. ಬಾಗಲಕೋಟೆಯ ಜನ ಅದಕ್ಕೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jys744hbksbz6vnjh0se6zz4,imgname-ssvfv-1751045509674.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.01):&lt;/strong&gt; ಕಾಂಗ್ರೆಸ್&zwnj;ನವರು ಧಮ್ಕಿ ಹಾಕಿ ಮತ ಪಡೆಯಲು ಹೊರಟಿದ್ದಾರೆ. ಬಾಗಲಕೋಟೆಯ ಜನ ಅದಕ್ಕೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಪ್ಪತ್ತು ವರ್ಷಗಳ ಹಿಂದಿನ ಬಾಗಲಕೋಟೆಗೂ ಇಂದಿನ ಬಾಗಲಕೋಟೆಗೂ ಇರುವ ಅಭಿವೃದ್ಧಿ ಬದಲಾವಣೆಯ ಕಾರಣಿಕರ್ತರನ್ನು ಹುಡುಕಿದರೆ ಸಿಗುವುದು ಚರಂತಿಮಠರು ಮಾತ್ರ. ರಾಜಧಾನಿ ಬೆಂಗಳೂರಿನಲ್ಲಿಯೂ ಈ ಮಾದರಿಯ ಸುಸಜ್ಜಿತ ರಸ್ತೆಗಳಿಲ್ಲ.&lt;/p&gt;&lt;p&gt;ರಾಜ್ಯದ ಯಾವ ಜಿಲ್ಲೆಯೂ ಬಾಗಲಕೋಟೆಯಷ್ಟು ವಿಶಾಲವಾಗಿ ಬೆಳೆದಿಲ್ಲ. ಇದೆಲ್ಲವನ್ನು ನೋಡಿದ ಜನ ಯಾರು ಗೆಲ್ಲಬೇಕೆಂದು ತೀರ್ಮಾನ ಮಾಡುತ್ತಾರೆ? ಎಂದು ಹೇಳಿದರು. ಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಮುಖ್ಯಮಂತ್ರಿಗಳು ಹೆದರಿಸಿ ಮತ ಪಡೆಯಲು ಹೊರಟಿದ್ದು ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿದ್ದಾರೆ. ಜನರು ಡಿಕೆಶಿ ಅವರ ಕಾಲೆಳೆಯುವ ಕೈಯನ್ನು ಬಲಪಡಿಸಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಸಿದ್ದರಾಮಯ್ಯ ನಿರ್ಗಮಿಸುವ ಸಿಎಂ&lt;/strong&gt;&lt;/h2&gt;&lt;p&gt;ಕಪ್ಪು ರಸ್ತೆಗೆ ಕೆಂಪು ಮಣ್ಣು ಹಾಕಿ ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರ ಅದೇ ಗುಂಡಿಯಲ್ಲಿ ಕೆಂಪು ಮಣ್ಣು ಹೊದ್ದು ಮಲಗುವ ಕಾಲ ಬಂದಿದೆ. ಸಿದ್ದರಾಮಯ್ಯ ನಿರ್ಗಮಿಸುವ ಸಿಎಂ ಆಗಿದ್ದು ಸದನ ಬರದೇ ಹೋಗಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ಚುನಾವಣೆ ಸಮಯದಲ್ಲಿ ಸಿಎಂ ಬದಲಾವಣೆ ಮಾಡಿದರೆ ಸೋಲುತ್ತೇವೆ ಎಂಬ ಭಯದಲ್ಲಿ ಅವರನ್ನು ಇಟ್ಟುಕೊಂಡಿದ್ದಾರೆ. ಆದರೂ ಸೋಲು ಅವರಿಗೆ ಅನಿವಾರ್ಯವಾಗಿದ್ದು, ಅವರ ಪಾಲಿಗೆ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಹದಿನೈದು ದಿನಗಳ ಒಳಗೆ ಮುಖ್ಯಮಂತ್ರಿ ಸ್ಥಾನದಿಂದ ಹೊರಹೋಗಲಿದ್ದಾರೆ.&lt;/p&gt;&lt;p&gt;ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬಹುದಿತ್ತು. ಆದರೆ ತಮ್ಮ ಕಾಲನ್ನು ತಾವೇ ಎಳೆದುಕೊಳ್ಳುತ್ತ ಕಾಲಹರಣ ಮಾಡಿದ್ದು, ತುಂಡಾದ ಕೈಹಿಡಿದುಕೊಂಡು ಬಂದಿರುವ ಕಳ್ಳೆತ್ತು ಸುಳ್ಳೆತ್ತುಗಳು ಎರಡೂ ಕ್ಷೇತ್ರದಲ್ಲಿ ಸೋಲುತ್ತವೆ. ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರು ಮಾಡಿದ ಕೆಲಸಗಳಿಂದಲೇ ಗೆಲ್ಲುತ್ತಾರೆ ಎಂದರು. ಮತಯಾಚನೆಯಲ್ಲಿ ಮಾಜಿ ಸಚಿವ ಎನ್.ಮಹೇಶ್, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಎನ್.ಬಿ ಬಣ್ಣೂರ, ಶಿವಲೀಲಾ ಪಟ್ಟಣಶೆಟ್ಟಿ ಸೇರಿದಂತೆ ಇತರರು ಭಾಗವಹಿಸಿದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/chalavadi-narayanaswamy-attack-congress-bagalkot-election-gvd/articleshow-y0ct9ul"/>
        </item>
    </channel>
</rss>
