<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 16 May 2026 07:29:53 +0530</lastBuildDate>
        <atom:link href="https://kannada.asianetnews.com/rss/bagalkot" rel="self" type="application/rss+xml"/>
        <item>
            <title><![CDATA[ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ]]></title>
            <link>https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18</link>
            <guid isPermaLink="true">https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18</guid>
            <pubDate>Mon, 11 May 2026 00:25:35 +0530</pubDate>
            <description><![CDATA[&lt;p&gt;ಸಹಕಾರಿ ಚಳವಳಿ ದೇಶದಲ್ಲಿ ದೊಡ್ಡ ಸಾಧನೆ ಮಾಡಿದೆ. ಬಡವರು ಆರ್ಥಿಕ ಸಧೃಡತೆಗೆ ಸಹಕಾರಿ ಕ್ಷೇತ್ರ ಸಹಕಾರಿಯಾಗಿದೆ. ಸಾಲ ಕೊಡುವುದು ಸುಲಭ ಆದರೆ ಸಾಲ ವಸೂಲಿ ಮಾಡುವುದು ಬಹಳ ಕಷ್ಟದ ಕೆಲಸ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hdv9x0kz2vxq49c8xyxh51mj,imgname-screenshot-2023-10-28-185239.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಳೇದಗುಡ್ಡ (ಮೇ.11):&lt;/strong&gt; ಸಹಕಾರಿ ಚಳವಳಿ ದೇಶದಲ್ಲಿ ದೊಡ್ಡ ಸಾಧನೆ ಮಾಡಿದೆ. ಬಡವರು ಆರ್ಥಿಕ ಸಧೃಡತೆಗೆ ಸಹಕಾರಿ ಕ್ಷೇತ್ರ ಸಹಕಾರಿಯಾಗಿದೆ. ಸಾಲ ಕೊಡುವುದು ಸುಲಭ ಆದರೆ ಸಾಲ ವಸೂಲಿ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಸಂಜಯ ಬರಗುಂಡಿಯವರು ಸಹಕಾರಿ ಬ್ಯಾಂಕ್&zwnj;ನ್ನು 25 ವರ್ಷಗಳ ಮುನ್ನಡೆಸಿಕೊಂಡು ಬಂದು ಇಂದು ಸ್ವಂತ ಕಟ್ಟಡ ನಿರ್ಮಿಸಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;&lt;p&gt;ಪಟ್ಟಣದಲ್ಲಿ ಬಸವೇಶ್ವರ ಪತ್ತಿನ ಸಹಕಾರಿ ಸಂಘದ (25ನೇ ವಾರ್ಷಿಕೋತ್ಸವ) ರಜತ ಮಹೋತ್ಸವದ ಸಂದರ್ಭದಲ್ಲಿ ಬ್ಯಾಂಕಿನಲ್ಲಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಈ ದೇಶದಲ್ಲಿ ಸಹಕಾರಿ ಚಳವಳಿ ನಡೆಯದಿದ್ದರೆ ಬಡವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬೆಳೆಯುವುದು ಕಷ್ಟವಾಗುತ್ತಿತ್ತು. ನೆಹರು, ವಲ್ಲಭಭಾಯಿ ಪಟೇಲರು ಸೇರಿ ಅನೇಕ ಮಹನೀಯರು ಸಹಕಾರಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಡೀ ದೇಶದಲ್ಲಿಯೇ ಹೆಚ್ಚಿನ ಸಾಲ ಸೌಲಭ್ಯ ಕೊಡುವ ಏಕೈಕ ಬ್ಯಾಂಕ್ ಬಾಗಲಕೋಟೆ, ವಿಜಯಪುರ ಡಿಸಿಸಿ ಬ್ಯಾಂಕ್ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಸಾಲಮನ್ನಾ&lt;/strong&gt;&lt;/h2&gt;&lt;p&gt;ಡಿಸಿಸಿ ಬ್ಯಾಂಕ್&zwnj; ರೈತರಿಗೆ ನೆರವಾಗಿದೆ. ಸಕಲಾಕ್ಕೆ ಸಾಲ ಸಿಗುತ್ತಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಲ ನೀಡಿದಂತೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಈ ರೀತಿಯಲ್ಲಿ ಇಲ್ಲ. ಅಲ್ಲದೆ ವಿಪತ್ತು, ಬರ ಪರಿಸ್ಥಿಗಳು ಎದುರಾದಾಗ ರಾಜ್ಯ ಸರಕಾರಗಳು ಮಾಡಿದ ಸಾಲ ಮನ್ನಾದಿಂದ ವಿಜಯಪುರ ಹಾಗೂ ಬಾಗಲಕೋಟೆ ಡಿಸಿಸಿ ಬ್ಯಾಂಕಿನಲ್ಲಿ ಸುಮಾರು ₹7500 ಕೋಟಿಯಷ್ಟು ಸಾಲಮನ್ನಾ ಆಗಿದೆ ಎಂದರು. ಇಳಕಲ್ ಚಿತ್ತರಗಿ ಸಂಸ್ಥಾನದ ಗುರುಮಹಾಂತ ಶ್ರೀಗಳು, ಕಮತಗಿ ಹೊಳೆಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.&lt;/p&gt;&lt;p&gt;ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಶಿವಾನಂದ ಉದುಪುಡಿ, ಮುರಗೇಶ ಕಡ್ಲಿಮಟ್ಟಿ, ಮಹಾಂತೇಶ ಮಮದಾಪೂರ, ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜಯ ಬರಗುಂಡಿ, ಉಪಾಧ್ಯಕ್ಷ ಉಮೇಶ ಹುನಗುಂದ, ನಿರ್ದೇಶಕರಾದ ಚಂದ್ರಶೇಖರ ಹರವಿ, ಮುಪ್ಪಣ್ಣ ಶೀಲವಂತ, ರಮೇಶ ಅಗಸಿಮನಿ, ಚಂದ್ರು ಪಟ್ಟಣಶೆಟ್ಟಿ, ಸಂಗಪ್ಪ ಹಡಪದ, ಸಿದ್ಲಿಂಗಪ್ಪ ಬರಗುಂಡಿ, ಅಶೋಕ ಬರಗುಂಡಿ, ಮುತ್ತು ಮೊರಬದ, ರಾಚಣ್ಣ ಕೆರೂರು, ನಾಗಪ್ಪ ಚಿಂದಿ, ಬಸವರಾಜ ಬಂಡಿವಡ್ಡರ, ಶರಣಬಸಪ್ಪ ಚಿಕ್ಕನರಗುಂದ, ಮ್ಯಾನೇಜರ ರಮೇಶ ಹಡಪದ, ಸಂಗಮೇಶ ಜೋಗುರ ಸೇರಿದಂತೆ ಸೇರಿದಂತೆ ಇದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18"/>
        </item>
        <item>
            <title><![CDATA[ಸಿದ್ದರಾಮಯ್ಯ ಮಾಡಿದ ಮೀಸಲು ಒಳಮೀಸಲೇ ಅಲ್ಲ: ಸಂಸದ ಗೋವಿಂದ ಕಾರಜೋಳ]]></title>
            <link>https://kannada.asianetnews.com/karnataka-districts/govind-karjol-slams-siddaramaiah-internal-reservation-karnataka-gvd/articleshow-2vbw2wi</link>
            <guid isPermaLink="true">https://kannada.asianetnews.com/karnataka-districts/govind-karjol-slams-siddaramaiah-internal-reservation-karnataka-gvd/articleshow-2vbw2wi</guid>
            <pubDate>Wed, 29 Apr 2026 17:11:13 +0530</pubDate>
            <description><![CDATA[&lt;p&gt;ಒಳ ಮೀಸಲಾತಿಯೆಂದರೆ ಎಷ್ಟೇ ಹುದ್ದೆಗಳಿದ್ದರೂ ಆ ಹುದ್ದೆಗಳಿಗೆ ಅದು ಅನ್ವಯ ಆಗಬೇಕು. ತಾರತಮ್ಯ ಆಗಬಾರದು. ಆದರೆ, ಈ ತಾರತಮ್ಯ ನಿಮ್ಮವರಿಂದಲೇ ಆಗಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪ ಮಾಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gfjj9t0w7nx3jvztjvn4rtn3,imgname-karjol.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.29): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಣಯ ಮಾಡಿದ ಒಳಮೀಸಲಾತಿ, ಅದು ಒಳ ಮೀಸಲಾತಿಯೇ ಅಲ್ಲ. ಒಳ ಮೀಸಲಾತಿಯೆಂದರೆ ಎಷ್ಟೇ ಹುದ್ದೆಗಳಿದ್ದರೂ ಆ ಹುದ್ದೆಗಳಿಗೆ ಅದು ಅನ್ವಯ ಆಗಬೇಕು. ತಾರತಮ್ಯ ಆಗಬಾರದು. ಆದರೆ, ಈ ತಾರತಮ್ಯ ನಿಮ್ಮವರಿಂದಲೇ ಆಗಿದೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಗಂಭೀರ ಆರೋಪ ಮಾಡಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯನವರಿಗೆ ಹೇಳಲು ಬಯಸುತ್ತೇನೆ. 15ಕ್ಕೂ ಕಡಿಮೆ ಸೀಟ್&zwnj;ಗಳಿದ್ದರೆ ಅದಕ್ಕೆ ಮೀಸಲಾತಿ ಇಲ್ಲವೆಂದರೆ ಅದು ಯಾವ ಮೀಸಲಾತಿ? ಮೈಸೂರಿನಲ್ಲಿ 47 ಜನ ಎಸ್ಸಿ ಪ್ರೊಫೆಸರ್&zwnj;ಗಳಿದ್ದರು. ಅದರಲ್ಲಿ 43 ಜನ ಒಂದೇ ಜಾತಿಯವರಿದ್ದಾರೆ. ಮೂರು ಜನ ಮಾದಿಗರಿದ್ದಾರೆ. ಒಬ್ಬರು ಭೋವಿ ಜನಾಂಗಕ್ಕೆ ಸೇರಿದವರು. ಇದು ಸಾಮಾಜಿಕ ನ್ಯಾಯವಾ? ಸಿದ್ದರಾಮಯ್ಯನವರೇ ಹೇಳಿ ಎಂದು ಪ್ರಶ್ನೆ ಮಾಡಿದರು.&lt;/p&gt;&lt;p&gt;ವೈಜ್ಞಾನಿಕವಾಗಿ ನಾಗಮೋಹನದಾಸ್ ಅವರು ವರದಿಯನ್ನು ಕೊಟ್ಟಿದ್ದರು. ಆದರೆ, ಅದನ್ನು ನೀವು ಅವೈಜ್ಞಾನಿಕ ಎಂದು ಹೇಳಿದಿರಿ. ಮಾಧುಸ್ವಾಮಿ ಅವರ ವರದಿ, ನ್ಯಾಯಮೂರ್ತಿ ಸದಾಶಿವಯ್ಯನವರ ವರದಿ ಇವೆಲ್ಲವೂ ಅವೈಜ್ಞಾನಿಕ ಅಂತ ನೀವು ಘೋಷಣೆ ಮಾಡಿದರೆ, ಅದನ್ನು ಜನರಿಗೆ ತಿಳಿಸಿ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಂದ ಕಮಿಟಿ ಮಾಡಿ ಅವರಿಂದ ವರದಿ ತೆಗೆಸಿಕೊಂಡು ಮಾಡುವಂಥದ್ದು ಏನಿತ್ತು? ಒಳಮೀಸಲಾತಿ ಸರ್ವೆ ಮಾಡುವುದಕ್ಕೆ ಸಾವಿರಾರು ಕೋಟಿ ಖರ್ಚು ಮಾಡಿದ್ದೀರಿ. ಏನು ಪ್ರಯೋಜನ ಎಂದು ಅವರು ಕಿಡಿಕಾರಿದರು.&lt;/p&gt;&lt;p&gt;ಕಾಂಗ್ರೆಸ್ ದಲಿತ ನಾಯಕರಿಂದ ಸಂಭ್ರಮಾಚರಣೆ ಕುರಿತು ಮಾತನಾಡಿದ ಅವರು, ಕೆಲವರು ಸಂಭ್ರಮಾಚರಣೆಯನ್ನು ಮಾಡುತ್ತಿದ್ದಾರಲ್ಲ, ಅವರಿಗೆ ತವರು ಮನೆ ಯಾವುದು ಅಂತ&zwnj; ಗೊತ್ತಿಲ್ಲ. ಗಂಡನ ಮನೆಯೂ ಗೊತ್ತಿಲ್ಲ. ಗಂಡನ ಮನೆ ಹಾಗೂ ತವರು ಮನೆ ವ್ಯತ್ಯಾಸ ಗೊತ್ತಿಲ್ಲದವರಿಗೆ ಏನು ಹೇಳುವುದಕ್ಕೆ ಆಗುತ್ತದೆ? ಕೆಲವು ಕೋಳಿಗಳಿಗೆ ಕಾಳು ಹಾಕಿರುತ್ತಾರೆ. ಕಾಳು ತಿನ್ನುವ ಸಲುವಾಗಿ ಹೀಗೆಲ್ಲ ಮಾಡುತ್ತವೆ ಎಂದು ಕಾಂಗ್ರೆಸ್ ದಲಿತ ನಾಯಕರಿಗೆ ತೀಕ್ಷ್ಣವಾಗಿ ಹೇಳಿದರು.&lt;/p&gt;&lt;h2&gt;&lt;strong&gt;ಹೆಚ್ಚು ಹುದ್ದೆಗಳು ಬರುವುದಿಲ್ಲ&lt;/strong&gt;&lt;/h2&gt;&lt;p&gt;ಶೇ.5.25 ಚಲವಾದಿ ಅವರಿಗೆ, ಮಾದಿಗರಿಗೆ ಶೇ.5.25 ಅಂತ ಹೇಳಿದಾರಲ್ಲ. 25 ಹೇಗೆ ಹೊಂದಿಸುತ್ತಾರೆ ಎಂದು ನನಗೆ ಹೇಳಲಿ. ಪಾಯಿಂಟ್ 25 ಇಲ್ಲವೇ ಇಲ್ಲ. 5 ಮಾತ್ರ ಸಿಕ್ಕಹಾಗೆ. ಅದು ಸ್ಕ್ಯಾವೆಂಜರ್ ಪೋಸ್ಟಿಗೆ, ಸ್ವೀಪರ್ ಪೋಸ್ಟ್&zwnj;ಗೆ, ಪೊಲೀಸ್ ಕಾನ್&zwnj;ಸ್ಟೇಬಲ್&zwnj;ಗೆ ಮಾತ್ರ ಒಳಮೀಸಲಾತಿ ಆಗುತ್ತದೆ. ಉಳಿದ ಯಾವುದೇ ಹುದ್ದೆಗಳಿಗೆ ಆಗುವುದಿಲ್ಲ. ಎಲ್ಲ ಇಲಾಖೆಗಳಲ್ಲಿ ಒಂದೇ ಸಾರಿ 15ಕ್ಕಿಂತ ಹೆಚ್ಚು ಹುದ್ದೆಗಳು ಬರುವುದಿಲ್ಲ. ವಿಶ್ವವಿದ್ಯಾಲಯಗಳಲ್ಲಿ ಒಂದೆರಡು ಹುದ್ದೆಗಳು ಬರುತ್ತವೆ. ಡಿವೈಎಸ್ಪಿಗಳು ನಾಲ್ಕು, ಐದು ಹುದ್ದೆಗಳು ಬರುತ್ತವೆ. ಅಸಿಸ್ಟೆಂಟ್ ಕಮಿಷನರ್ ನಾಲ್ಕು ಆರು ಬರುತ್ತವೆ.&lt;/p&gt;&lt;p&gt;ಎಕ್ಸಿಕ್ಯೂಟಿವ್ ಪೋಸ್ಟ್&zwnj;ಗಳು ಒಂದೇ ಸಾರಿ ಬರುವುದಿಲ್ಲ. 4-2-6 ಬರುತ್ತವೆ. ಆಗ ಮೀಸಲಾತಿ ಇಲ್ಲ ಅಂದ್ರೆ ಮೀಸಲಾತಿ ಯಾರಿಗಾಗಿ? ಮೀಸಲಾತಿ ಯಾರಿಗೆ ಸಿಗುತ್ತದೆ ಅಂದ್ರೆ ಸ್ಕ್ಯಾವೆಂಜರ್ಸ್&zwnj;ಗಳಿಗೆ. ಕಕ್ಕಸು ತೊಳೆಯುವವರಿಗೆ. ಒಳ ಮೀಸಲಾತಿ ಕಸ ಹೊಡೆಯುವವರಿಗೆ. ಪೊಲೀಸ್ ಕಾನ್ಸ್&zwnj;ಸ್ಟೇಬಲ್&zwnj;ನವರಿಗೆ ಮಾತ್ರ. ಸಿದ್ದರಾಮಯ್ಯನವರ ಸಾಮಾಜಿಕ ನ್ಯಾಯ ಇದು. ಇದು ಕಾಂಗ್ರೆಸ್ ನೀತಿ. ಆದ್ದರಿಂದ ಇದನ್ನು ನಾನು ಖಂಡಿಸುತ್ತೇನೆ. ಕೂಡಲೇ ಅದನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದ ಉದ್ದಗಲಕ್ಕೂ ನಾವು ಬೃಹತ್ ಪ್ರಮಾಣದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/govind-karjol-slams-siddaramaiah-internal-reservation-karnataka-gvd/articleshow-2vbw2wi"/>
        </item>
        <item>
            <title><![CDATA[ಕಾಂಗ್ರೆಸ್‌ ಇರುವುದು ಅಧಿಕಾರಕ್ಕಲ್ಲ ಜನರ ಸೇವೆಗೆ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk</link>
            <guid isPermaLink="true">https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk</guid>
            <pubDate>Wed, 06 May 2026 00:26:40 +0530</pubDate>
            <description><![CDATA[&lt;p&gt;ಇನ್ನೆರಡು ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಜನಹಿತದ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಬಡವರೂ ಸೇರಿದಂತೆ ಜಾತ್ಯತೀತವಾಗಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದು ಸಚಿವ ಈಶ್ವರ್&zwnj; ಖಂಡ್ರೆ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9es3asmbdr2q8bxc24xnxzw,imgname-eshwar-khandre-1762506418996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಮಖಂಡಿ (ಮೇ.06): &lt;/strong&gt;ರಾಜ್ಯ ಕಾಂಗ್ರೆಸ್&zwnj;ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್&zwnj; ಇರುವುದು ಅಧಿಕಾರಕ್ಕಲ್ಲ ಜನರ ಸೇವೆಗೆ. ಇದು ಸೇವಾಪಕ್ಷ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್&zwnj; ಖಂಡ್ರೆ ಹೇಳಿದರು. ನಿರೀಕ್ಷಿತ ಉಪ ಚುನಾವಣೆಗಳ ಫಲಿತಾಂಶ ಬಂದಿವೆ. ಇದರಿಂದ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗುವುದಿಲ್ಲ. ಮೂರು ವರ್ಷಗಳ ಕಾಲ ನುಡಿದಂತೆ ನಡೆದು ಜನಪರ ಆಡಳಿತ ನೀಡಿದ್ದೇವೆ.&lt;/p&gt;&lt;p&gt;ಉಳಿದ ಇನ್ನೆರಡು ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಜನಹಿತದ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಬಡವರೂ ಸೇರಿದಂತೆ ಜಾತ್ಯತೀತವಾಗಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಪಕ್ಷದ ವರಿಷ್ಠರ ಸೂಚನೆಯಂತೆ ಎಲ್ಲ ನಾಯಕರು ನಡೆದುಕೊಳ್ಳುತ್ತಾರೆ. ಅಧಿಕಾರಕ್ಕಾಗಿ ಅಭಿಪ್ರಾಯ ಬೇಧವಿಲ್ಲ. ಶಾಸಕರು ತಂಡೋಪತಂಡವಾಗಿ ದೆಹಲಿ ಪ್ರವಾಸದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.ಜನಪರ ಆಡಳಿತಕ್ಕೆ ಮತ:&lt;/p&gt;&lt;p&gt;ಬಾಗಲಕೊಟೆ ಹಾಗೂ ದಾವಣಗೆರೆಯ ಮತದಾರರು ಜನಪರ ಆಡಳಿತಕ್ಕೆ ಮತ ನೀಡಿದ್ದಾರೆ. ಎಲ್ಲ ಸಮಾಜದವರ ಬೆಂಬಲ ಕಾರ್ಯಕರ್ತರ ಶ್ರಮದಿಂದ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಸಾಧನೆಗೆ ದೊರೆತ ಜಯವಾಗಿದೆ. ಕಾಂಗ್ರೆಸ್&zwnj; ಗೆಲುವಿನ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್&zwnj;, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಮುಖಂಡರ ಶ್ರಮವಿದೆ. ಮುಂಬರುವ 2028ರ ಚುನಾವಣೆಗಳಿಗೆ ಉಪ ಚುನಾವಣೆ ಫಲಿತಾಂಶಗಳು ಕಾಂಗ್ರೆಸ್&zwnj; ಗೆಲುವಿನ ಸಂದೇಶ ನೀಡಿವೆ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಪಂಚರಾಜ್ಯಗಳ ಚುನಾವಣೆ&lt;/strong&gt;&lt;/p&gt;&lt;p&gt;ಕೇರಳದ ಪ್ರಜ್ಞಾವಂತ ಮತದಾರರು ಯುಡಿಎಫ್&zwnj;ಗೆ 89 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ತಮಿಳುನಾಡಿನ ಜನ ಟಿವಿಕೆಗೆ ಮನ್ನಣೆ ನೀಡಿದ್ದು, ಜನರು ಬದಲಾವಣೆ ಬಯಸಿದ್ದಾರೆ. ಪಶ್ಚಿಮ ಬಂಗಾಳ, ಪುದುಚೇರಿ, ಅಸ್ಸಾಂ ಫಲಿತಾಂಶಗಳನ್ನು ನೋಡಿದ್ದೇವೆ. ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು. ಚುನಾವಣೆ ಆಯೋಗ, ಇಡಿ, ಐಟಿ ಮುಂತಾದ ಸಂಸ್ಥೆಗಳು ಸಂವಿಧಾನ ಬದ್ಧವಾಗಿ ನಡೆಯಬೇಕು. ಕಾಂಗ್ರೆಸ್ ಮುಖಂಡರ ಮೇಲೆ ಇಡಿ ದಾಳಿಗಳಾಗುತ್ತವೆ ಎಂದ ಅವರು, ಬಿಜೆಪಿ ಸೇರಿದರೆ ಕ್ಲೀನ್&zwnj; ಚಿಟ್&zwnj; ನೀಡಲಾಗುತ್ತಿದೆ. ಇದ್ಯಾವ ನ್ಯಾಯ? ಪಾರದರ್ಶಕತೆ ಇಲ್ಲದಂತಾಗಿದೆ.&lt;/p&gt;&lt;p&gt;ಆಮ್&zwnj; ಆದ್ಮಿ ಪಕ್ಷದ 7 ಜನ ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದು, ಎಎಪಿಯ ಶಾಸಕರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಜನ ಮತದಾರರನ್ನು ಎಸ್&zwnj;ಐಆರ್&zwnj; ನೆಪದಲ್ಲಿ ಪಟ್ಟಿಯಿಂದ ಕೈಬಿಡಲಾಗಿದೆ. ನುಸುಳುಕೋರರು ಎಂದು ಹೇಳುತ್ತಿರುವುದು ಕೇಂದ್ರ ಸರ್ಕಾರದ ವೈಫಲ್ಯವಲ್ಲವೇ, ಪೆಹಲ್ಗಾಮ್&zwnj; ದಾಳಿ, ಕಾಶ್ಮೀರದ ದಾಳಿಗಳು ಭದ್ರತಾ ವ್ಯವಸ್ಥೆಯ ವೈಫಲ್ಯವಾಗಿದೆ. ಲಕ್ಷಾಂತರ ಮತದಾರರ ಹಕ್ಕು ಕಸಿದುಕೊಳ್ಳಲಾಗಿದೆ. ಇದಕ್ಕೆಲ್ಲ ಸಮಯ ಬಂದಾಗ ಉತ್ತರ ದೊರೆಯುತ್ತದೆ ಎಂದರು.&lt;/p&gt;&lt;h2&gt;&lt;strong&gt;ಜಮಖಂಡಿ ಕ್ಷೇತ್ರದೊಂದಿಗೆ ಅವಿನಾಭಾವ ಸಂಬಂಧ&lt;/strong&gt;&lt;/h2&gt;&lt;p&gt;ಜಮಖಂಡಿ ಕ್ಷೇತ್ರಕ್ಕೂ ತಮಗೂ ಅವಿನಾಭಾವ ಸಂಬಂಧವಿದೆ. ಹಿಂದಿನ ಶಾಸಕರಾಗಿದ್ದ ದಿ.ಸಿದ್ದು ನ್ಯಾಮಗೌಡರು ಕ್ಷೇತ್ರದ ಅಭಿವೃದ್ಧಿಗೆ ಅಮೋಘ ಕೊಡುಗೆ ನೀಡಿದ್ದಾರೆ. ನಂತರದ ಚುನಾವಣೆಗಳಲ್ಲಿ ನನ್ನ ನೇತೃತ್ವವಿತ್ತು. ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿಯ ಜನರ ಸುಖ ದುಃಖದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk"/>
        </item>
        <item>
            <title><![CDATA[ಬಾಗಲಕೋಟೆ ಕದನ: ಎಣಿಕೆ ಆರಂಭದಲ್ಲೇ ಕೈ ಪಾಳಯದಲ್ಲಿ ಸಂಭ್ರಮ, 5ನೇ ಸುತ್ತಿನಲ್ಲೂ ಕಾಂಗ್ರೆಸ್ ಭರ್ಜರಿ ಮುನ್ನಡೆ]]></title>
            <link>https://kannada.asianetnews.com/politics/bagalkot-by-election-counting-congress-candidate-umesh-meti-leads-votes-after-4th-round-gdp/articleshow-4zfhlv8</link>
            <guid isPermaLink="true">https://kannada.asianetnews.com/politics/bagalkot-by-election-counting-congress-candidate-umesh-meti-leads-votes-after-4th-round-gdp/articleshow-4zfhlv8</guid>
            <pubDate>Mon, 04 May 2026 09:41:30 +0530</pubDate>
            <description><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 5ನೇ ಸುತ್ತಿನ ಅಂತ್ಯಕ್ಕೆ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ &amp;nbsp;ಬಾರೀ ಮತಗಳ ಅಂತರ ಸಾಧಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqrjtd1267vmt303pk636sfj,imgname-----------1--1777867764770.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೋರಾಗಿ ಮುಂದುವರಿಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪ್ರತಿಯೊಂದು ಸುತ್ತಿನಲ್ಲೂ ಸ್ಪಷ್ಟ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭಿಕ ಸುತ್ತಿನಿಂದಲೇ ಮುನ್ನಡೆ ಸಾಧಿಸಿರುವ ಮೇಟಿ, ಐದನೇ ಸುತ್ತಿನ ಮತ ಎಣಿಕೆ &amp;nbsp;ಅಂತ್ಯಕ್ಕೆ ಭಾರೀ ಮತಗಳ ಅಂತರವನ್ನು ನಿರ್ಮಿಸಿದ್ದಾರೆ.&lt;/p&gt;&lt;p&gt;ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು, ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು, ನಾಯಕರ ಫೋಟೋಗಳನ್ನು ಹಿಡಿದು ಉತ್ಸಾಹಭರಿತವಾಗಿ ಜಯಘೋಷಗಳನ್ನು ಕೂಗುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಮತ ಎಣಿಕೆ ಕೇಂದ್ರದತ್ತ ಕಾರ್ಯಕರ್ತರು ದೌಡಾಯಿಸುತ್ತಿರುವುದು ಸಹ ಗಮನ ಸೆಳೆಯುತ್ತಿದೆ.&lt;/p&gt;&lt;p&gt;ಇನ್ನೊಂದೆಡೆ, ಬಿಜೆಪಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಬಳಿ ಕಾಣಿಸದೇ ಇರುವುದರಿಂದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಮುನ್ನಡೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮೌನವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.&lt;/p&gt;&lt;h2&gt;5ನೇ ಸುತ್ತಿನ ಫಲಿತಾಂಶ&lt;/h2&gt;&lt;p&gt;ನಾಲ್ಕನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ನಾಲ್ಕನೇ ಸುತ್ತಿನಲ್ಲೇ ದ್ವಿಗುಣಕ್ಕೂ ಹೆಚ್ಚು ಅಂತರದ ಮುನ್ನಡೆ ಕಾಯ್ದುಕೊಂಡಿರುವುದು ಕಾಂಗ್ರೆಸ್ ಶಿಬಿರದಲ್ಲಿ ಮತ್ತಷ್ಟು ಉತ್ಸಾಹ ತುಂಬಿದೆ.&lt;/p&gt;&lt;p&gt;ಉಮೇಶ್ ಮೇಟಿ (ಕಾಂಗ್ರೆಸ್): 27,314 ಮತಗಳು&lt;/p&gt;&lt;p&gt;ವೀರಣ್ಣ ಚರಂತಿಮಠ (ಬಿಜೆಪಿ): 13,923 ಮತಗಳು&lt;/p&gt;&lt;p&gt;ಮತಗಳ ಅಂತರ: 13,391&lt;/p&gt;&lt;h2&gt;ಮತ ಎಣಿಕೆ ಪ್ರಕ್ರಿಯೆ ವಿವರ&lt;/h2&gt;&lt;p&gt;ಒಟ್ಟು 14 ಟೇಬಲ್&zwnj;ಗಳ ಮೂಲಕ 23 ಸುತ್ತುಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಪ್ರತಿ ಸುತ್ತಿನಲ್ಲೂ ಫಲಿತಾಂಶಗಳು ಸ್ಪಷ್ಟವಾಗಿ ಹೊರಬರುತ್ತಿವೆ. ಮುಂದಿನ ಸುತ್ತುಗಳಲ್ಲಿಯೂ ಇದೇ ಟ್ರೆಂಡ್ ಮುಂದುವರಿಯುತ್ತದೆಯೇ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.&lt;/p&gt;&lt;h2&gt;ಉಪಚುನಾವಣೆಯ ಹಿನ್ನೆಲೆ&lt;/h2&gt;&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ಸ್ಥಾನ ಖಾಲಿಯಾಗಿದ್ದು, ಏಪ್ರಿಲ್ 9ರಂದು ಮತದಾನ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್&zwnj;ನ ಉಮೇಶ್ ಮೇಟಿ ಹಾಗೂ ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದರು.&lt;/p&gt;&lt;p&gt;ಇದಕ್ಕೂ ಮೊದಲು ಮೇಟಿ ಕುಟುಂಬದೊಳಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ತೀವ್ರ ಪೈಪೋಟಿ ಉಂಟಾಗಿ, ಪಕ್ಷದೊಳಗಿನ ಭಿನ್ನಮತಕ್ಕೂ ಕಾರಣವಾಗಿತ್ತು. ಆದರೆ ಇದೀಗ ಮತ ಎಣಿಕೆಯಲ್ಲಿ ಉಮೇಶ್ ಮೇಟಿ ಮುನ್ನಡೆ ಸಾಧಿಸುತ್ತಿರುವುದು ಕಾಂಗ್ರೆಸ್&zwnj;ಗೆ ದೊಡ್ಡ ಆತ್ಮವಿಶ್ವಾಸ ನೀಡಿದೆ.&lt;/p&gt;&lt;p&gt;ಒಟ್ಟಿನಲ್ಲಿ ಮತ ಎಣಿಕೆಯ ಆರಂಭಿಕ ಸುತ್ತುಗಳಿಂದಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆ ಕಾಯ್ದುಕೊಂಡಿದ್ದು, ಫಲಿತಾಂಶ ಕಾಂಗ್ರೆಸ್ ಪರ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಮುಂದಿನ ಸುತ್ತುಗಳಲ್ಲಿ ಈ ಮುನ್ನಡೆ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/politics/bagalkot-by-election-counting-congress-candidate-umesh-meti-leads-votes-after-4th-round-gdp/articleshow-4zfhlv8"/>
        </item>
        <item>
            <title><![CDATA[ಹನುಮಂತ ದೇವರ ಜಾತ್ರೆಗೆ ₹600 ಪಟ್ಟಿ ಸಂಗ್ರಹ: ಹಣ ಕೊಡದ 7 ಕುಟುಂಬಗಳಿಗೆ ಊರಿನಿಂದ ಬಹಿಷ್ಕಾರ ಹಾಕಿದ ಗ್ರಾಮಸ್ಥರು!]]></title>
            <link>https://kannada.asianetnews.com/karnataka-districts/social-boycott-of-7-families-hunsikatti-village-jamkhandi-over-600-rupees-tax-kannada-sat/articleshow-6lvovgo</link>
            <guid isPermaLink="true">https://kannada.asianetnews.com/karnataka-districts/social-boycott-of-7-families-hunsikatti-village-jamkhandi-over-600-rupees-tax-kannada-sat/articleshow-6lvovgo</guid>
            <pubDate>Fri, 01 May 2026 17:46:32 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಹುಣಸೀಕಟ್ಟಿ ಗ್ರಾಮದಲ್ಲಿ, ಜಾತ್ರೆಯ ದೇಣಿಗೆ ನೀಡದ ಕಾರಣಕ್ಕೆ 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಈ ಅಮಾನವೀಯ ಪದ್ಧತಿಯ ವಿರುದ್ಧ ಸಂತ್ರಸ್ತರು ಅಧಿಕಾರಿಗಳಿಗೆ ದೂರು ನೀಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhqe83wyt1hsrwfeh56yg9k,imgname-bagalkot-social-boycott--1--1777637728379.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮೇ 01): ಇಂ&lt;/strong&gt;ದಿನ ಆಧುನಿಕ ಯುಗದಲ್ಲೂ ಹಳ್ಳಿಗಳಲ್ಲಿ ಅನಿಷ್ಟ ಪದ್ಧತಿಗಳು ಜೀವಂತವಾಗಿವೆ ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದಲ್ಲಿ ನಡೆದ ಘಟನೆಯೇ ಸಾಕ್ಷಿ. ಕೇವಲ 600 ರೂಪಾಯಿ ದೇಣಿಗೆ (ಗ್ರಾಮದ ಜಾತ್ರೆಯ ಪಟ್ಟಿ ಹಣ) ನೀಡಿಲ್ಲ ಎಂಬ ಕಾರಣಕ್ಕೆ ಗ್ರಾಮದ 7 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;h3&gt;&lt;strong&gt;ಏನಿದು ವಿಲಕ್ಷಣ ಘಟನೆ?&lt;/strong&gt;&lt;/h3&gt;&lt;p&gt;ಗ್ರಾಮದಲ್ಲಿ ಏಪ್ರಿಲ್ 2 ರಂದು ಹನುಮಂತ ದೇವರ ಓಕುಳಿ ಜಾತ್ರೆ ನಡೆದಿತ್ತು. ಈ ಜಾತ್ರೆಗಾಗಿ ಪ್ರತಿ ಮನೆಯಿಂದ ಪಟ್ಟಿ ಹಣ ವಸೂಲಿ ಮಾಡಲಾಗಿತ್ತು. ಆದರೆ, ಗ್ರಾಮದ 7 ಕುಟುಂಬಗಳು 600 ರೂಪಾಯಿ ಪಟ್ಟಿ ಹಣ ನೀಡಲು ನಿರಾಕರಿಸಿದ್ದವು ಎನ್ನಲಾಗಿದೆ. ಇದೇ ಕಾರಣಕ್ಕೆ ಆಕ್ರೋಶಗೊಂಡ ಗ್ರಾಮದ ಹಿರಿಯರು, ಏಪ್ರಿಲ್ 5 ರಂದು ಇಡೀ ಊರಿನಲ್ಲಿ ಡಂಗುರ ಸಾರಿಸಿ ಈ ಏಳು ಕುಟುಂಬಗಳನ್ನು 'ದೈವದಿಂದ ಹೊರಗಿಡಲಾಗಿದೆ' ಎಂದು ಘೋಷಿಸಿದ್ದಾರೆ.&lt;/p&gt;&lt;h2&gt;&lt;strong&gt;ಬಹಿಷ್ಕಾರದ ಕಠಿಣ ನಿಯಮಗಳು:&lt;/strong&gt;&lt;/h2&gt;&lt;p&gt;ಹಿರಿಯರು ಸಾರಿಸಿರುವ ಡಂಗುರದ ಪ್ರಕಾರ, ಬಹಿಷ್ಕಾರಕ್ಕೊಳಗಾದ ಕುಟುಂಬಗಳ ವಿರುದ್ಧ ಈ ಕೆಳಗಿನ ನಿರ್ಬಂಧ ಹೇರಲಾಗಿದೆ:&lt;/p&gt;&lt;ul&gt; &lt;li&gt;ಈ ಕುಟುಂಬಗಳ ಮನೆಗೆ ಯಾವುದೇ ಸ್ವಾಮೀಜಿಗಳು ಅಥವಾ ಪೂಜಾರಿಗಳು ಹೋಗುವಂತಿಲ್ಲ.&lt;/li&gt; &lt;li&gt;ಇವರ ಮನೆಯಲ್ಲಿ ನಡೆಯುವ ಯಾವುದೇ ಶುಭ ಅಥವಾ ಅಶುಭ ಕಾರ್ಯಗಳಿಗೆ ಗ್ರಾಮಸ್ಥರು ಹಾಜರಾಗುವಂತಿಲ್ಲ.&lt;/li&gt; &lt;li&gt;ಗ್ರಾಮದ ಕಿರಾಣಿ ಅಂಗಡಿಯವರು ಈ ಕುಟುಂಬಗಳಿಗೆ ಯಾವುದೇ ಜೀವನಾವಶ್ಯಕ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ.&lt;/li&gt;&lt;/ul&gt;&lt;h3&gt;&lt;strong&gt;ನ್ಯಾಯಕ್ಕಾಗಿ ರೇಲ್ವೆ ಉದ್ಯೋಗಿಯ ಹೋರಾಟ:&lt;/strong&gt;&lt;/h3&gt;&lt;p&gt;ಬಹಿಷ್ಕಾರಕ್ಕೊಳಗಾದವರಲ್ಲಿ ಯಲ್ಲಪ್ಪ ಛಗಣ್ಣವರ ಎಂಬುವವರು ಹುಬ್ಬಳ್ಳಿಯ ರೇಲ್ವೆ ವರ್ಕ್&zwnj;ಶಾಪ್&zwnj;ನಲ್ಲಿ ಸೀನಿಯರ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಅಮಾನವೀಯ ಪದ್ಧತಿಯನ್ನು ಪ್ರಶ್ನಿಸಿರುವ ಅವರು, 'ನಮಗೆ ಈ ಬಹಿಷ್ಕಾರದಿಂದ ಸಮಾಜದಲ್ಲಿ ತೀವ್ರ ಅಪಮಾನವಾಗಿದೆ, ನಮ್ಮ ಗೌರವಕ್ಕೆ ಧಕ್ಕೆಯಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲ್ಲಪ್ಪ ಅವರು ಜಮಖಂಡಿ ತಹಸೀಲ್ದಾರ್, ಎಸಿ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಡಂಗುರ ಸಾರಿದವರು ಮತ್ತು ಸಾರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳ ಭೇಟಿ; ಸಂತ್ರಸ್ತರ ಅತೃಪ್ತಿ:&lt;/strong&gt;&lt;/h3&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸಭೆ ನಡೆಸಿ ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಕೇವಲ ಸಮಾಧಾನ ಮಾಡಿದರೆ ಸಾಲದು, ನಮಗಾದ ಅಪಮಾನಕ್ಕೆ ಹೊಣೆ ಯಾರು? ಅನ್ಯಾಯ ಮಾಡಿದವರ ಮೇಲೆ ಎಫ್&zwnj;ಐಆರ್ ದಾಖಲಿಸಿ ಶಿಕ್ಷೆಯಾಗಬೇಕು ಎಂದು ಸಂತ್ರಸ್ತ ಕುಟುಂಬಗಳು ಪಟ್ಟು ಹಿಡಿದಿವೆ. ಸಂವಿಧಾನದ ಅಡಿಯಲ್ಲಿ ಸಾಮಾಜಿಕ ಬಹಿಷ್ಕಾರವು ಗಂಭೀರ ಅಪರಾಧವಾಗಿದ್ದು, ಜಿಲ್ಲಾಡಳಿತ ಈ ಪ್ರಕರಣವನ್ನು ಹೇಗೆ ನಿಭಾಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/social-boycott-of-7-families-hunsikatti-village-jamkhandi-over-600-rupees-tax-kannada-sat/articleshow-6lvovgo"/>
        </item>
        <item>
            <title><![CDATA[ಹಿಂಬದಿ ಚಕ್ರ ತುಂಡಾಗಿ ಪಲ್ಟಿ ಹೊಡೆದ ಮಾವು ತುಂಬಿದ ಲಾರಿ; ರಸ್ತೆಯಲ್ಲಿ ಚೆಲ್ಲಿದ ಮಾವಿನ ಹಣ್ಣು!]]></title>
            <link>https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp</link>
            <guid isPermaLink="true">https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp</guid>
            <pubDate>Thu, 14 May 2026 16:44:35 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್&zwnj;ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಗೆ ಚೆಲ್ಲಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krk2r9fe0ft0x6ehksr09v6c,imgname-bagalkote-mango-laden-truck-overturns-1778756888046.jpg" type="image/jpeg" height="390" width="690"/>
            <content:encoded><![CDATA[ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್&zwnj;ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಗೆ ಚೆಲ್ಲಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.&lt;img&gt;&lt;p&gt;&lt;strong&gt;ಬಾಗಲಕೋಟೆ (ಮೇ 14): ಜಿ&lt;/strong&gt;ಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಲಾರಿಯ ಹಿಂಬದಿಯ ಚಕ್ರಗಳು ವಾಹನದಿಂದ ಪ್ರತ್ಯೇಕವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.&lt;/p&gt;&lt;img&gt;&lt;p&gt;ಮೂಲಗಳ ಪ್ರಕಾರ, ಈ ಲಾರಿಯು ಮಾವಿನ ಹಣ್ಣನ್ನು ತುಂಬಿಕೊಂಡು ಕಲಬುರ್ಗಿ ಕಡೆಗೆ ವೇಗವಾಗಿ ಹೊರಟಿತ್ತು. ಇಳಕಲ್ ತಾಲೂಕಿನ ಗೊರಬಾಳ ಕ್ರಾಸ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಮಧ್ಯೆ ಇದ್ದ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ. ಲಾರಿ ಅತಿ ವೇಗದಲ್ಲಿದ್ದ ಕಾರಣ ಡಿವೈಡರ್&zwnj;ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿಯ ಪಾಟಾ ಕಟ್ ಆಗಿ, ವಾಹನದಿಂದ ಚಕ್ರಗಳೇ ಕಿತ್ತು ಬಂದಿವೆ.&lt;/p&gt;&lt;img&gt;&lt;p&gt;ಅಪಘಾತ ಸಂಭವಿಸಿದ ತಕ್ಷಣ ಲಾರಿಯಲ್ಲಿದ್ದ ಮಾವಿನ ಹಣ್ಣಿನ ಬಾಕ್ಸ್&zwnj;ಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ನೂರಾರು ಕೆಜಿ ಮಾವಿನ ಹಣ್ಣುಗಳು ರಸ್ತೆಯ ಮೇಲೆ ಹರಡಿಕೊಂಡಿದ್ದು, ಜಖಂಗೊಂಡಿವೆ.&lt;/p&gt;&lt;img&gt;&lt;p&gt;ಘಟನೆಯಲ್ಲಿ ಲಾರಿ ಕೂಡ ಸಂಪೂರ್ಣ ಜಖಂಗೊಂಡಿದ್ದು, ಮಾಲೀಕರಿಗೆ ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.&lt;/p&gt;&lt;img&gt;&lt;p&gt;ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ನಂತರ ಸ್ಥಳಕ್ಕೆ ಆಗಮಿಸಿದವರು ರಸ್ತೆಯ ಮೇಲೆ ಬಿದ್ದಿದ್ದ ಮಾವಿನ ಹಣ್ಣುಗಳನ್ನು ಮತ್ತು ಬಾಕ್ಸ್&zwnj;ಗಳನ್ನು ಪಕ್ಕಕ್ಕೆ ಸರಿಸಿದರು. ಉಳಿದ ಹಣ್ಣುಗಳನ್ನು ಮತ್ತೊಂದು ಲಾರಿಗೆ ತುಂಬಿಸಿ ಸಾಗಿಸುವ ವ್ಯವಸ್ಥೆ ಮಾಡಲಾಯಿತು.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp"/>
        </item>
        <item>
            <title><![CDATA[ತಮಿಳುನಾಡು ನಟ ವಿಜಯ್‌ಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ; ದಾವಣಗೆರೆ ಉಪ ಚುನಾವಣೆ ಬಗ್ಗೆ ಹೇಳಿದ್ದೇನು?]]></title>
            <link>https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu</link>
            <guid isPermaLink="true">https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu</guid>
            <pubDate>Mon, 04 May 2026 11:57:07 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ರಾಷ್ಟ್ರ ರಾಜಕಾರಣದ ಬಗ್ಗೆಯೂ ಮಾತನಾಡಿದ ಅವರು, ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರಿಗೆ ಗೌರವ ನಮನ ಸಲ್ಲಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kqrtefv5s1tqfpcas8b3zma0,imgname-siddaramaiah-wished-vijay-1777875763045.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 04): ರಾ&lt;/strong&gt;ಜ್ಯದ ಕುತೂಹಲ ಕೆರಳಿಸಿರುವ ಉಪ ಚುನಾವಣಾ ಫಲಿತಾಂಶದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಉಪ ಚುನಾವಣೆ: ಗೆಲುವಿನ ವಿಶ್ವಾಸ&lt;/strong&gt;&lt;/h3&gt;&lt;p&gt;ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ನಾವು ಮೊದಲಿನಿಂದಲೂ ಈ ಎರಡೂ ಕ್ಷೇತ್ರಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೆವು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸ್ವಲ್ಪ ಮಟ್ಟಿಗೆ ಮುನ್ನಡೆ ಕಡಿಮೆ ಆಗಿರಬಹುದು, ಆದರೆ ಅಂತಿಮವಾಗಿ ನಾವೇ ಗೆಲುವು ಸಾಧಿಸುತ್ತೇವೆ. ಇನ್ನು ಬಾಗಲಕೋಟೆಯಲ್ಲಿ ನಾವು ಸ್ಪಷ್ಟವಾಗಿ ಗೆಲುವಿನ ಹಾದಿಯಲ್ಲಿದ್ದೇವೆ. ಒಟ್ಟಾರೆಯಾಗಿ ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ' ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ರಾಷ್ಟ್ರ ರಾಜಕಾರಣ ಮತ್ತು ನಟ ವಿಜಯ್&zwnj;ಗೆ ಅಭಿನಂದನೆ&lt;/strong&gt;&lt;/h2&gt;&lt;p&gt;ಇದೇ ಸಂದರ್ಭದಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿರುವ ನಟ ವಿಜಯ್ ಅವರಿಗೆ ಸಿಎಂ ಅಭಿನಂದನೆ ಸಲ್ಲಿಸಿದರು. ಇತರೆ ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಿದ ಅವರು, 'ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇತ್ತು ಎನಿಸುತ್ತಿದೆ. ಅಸ್ಸಾಂನಲ್ಲಿ ನಾವು ನಿರೀಕ್ಷೆ ಮಾಡಿದಂತೆಯೇ ಫಲಿತಾಂಶ ಬಂದಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆದ್ದಿರುವುದು ನಮಗೆ ಸಮಾಧಾನ ತಂದಿದೆ' ಎಂದರು.&lt;/p&gt;&lt;h3&gt;&lt;strong&gt;ಪ್ರಥಮ ಸಿಎಂ ಕೆ.ಸಿ. ರೆಡ್ಡಿ ಅವರಿಗೆ ಗೌರವ ನಮನ&lt;/strong&gt;&lt;/h3&gt;&lt;p&gt;ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ, ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.&lt;/p&gt;&lt;p&gt;ಬಳಿಕ ಕೆ.ಸಿ. ರೆಡ್ಡಿ ಅವರ ಆಡಳಿತವನ್ನು ಸ್ಮರಿಸಿದ ಸಿಎಂ, 'ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಕೆ.ಸಿ. ರೆಡ್ಡಿ ಅವರು ಸಮರ್ಥ ಆಡಳಿತ ನೀಡಿದ್ದರು. ಅವರೊಬ್ಬ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿ. ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಅವರು ಹಾಕಿಕೊಟ್ಟ ಬುನಾದಿ ಅಪಾರ. ಹಲವಾರು ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ರಾಜ್ಯದ ಪ್ರಗತಿಗೆ ಶ್ರಮಿಸಿದ ಅವರ ಹೆಜ್ಜೆಗಳು ಇಂದಿಗೂ ನಮಗೆ ದಾರಿದೀಪವಾಗಿವೆ. ಅವರ ನೆನಪನ್ನು ಶಾಶ್ವತವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ನಿರಂತರವಾಗಿ ಮಾಡುತ್ತಿದೆ' ಎಂದು ಗುಣಗಾನ ಮಾಡಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಒಟ್ಟಾರೆಯಾಗಿ ಒಂದು ಕಡೆ ಚುನಾವಣಾ ರಾಜಕೀಯದ ಚದುರಂಗದಾಟ, ಇನ್ನೊಂದು ಕಡೆ ರಾಜ್ಯದ ನಿರ್ಮಾತೃಗಳ ಸ್ಮರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸಕ್ರಿಯವಾಗಿ ಕಾಣಿಸಿಕೊಂಡರು.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu"/>
        </item>
        <item>
            <title><![CDATA[ಕೈ ಪಾಳಯದಲ್ಲೀಗ ಉಪಸಮರ ಲಾಭ, ನಷ್ಟದ ಲೆಕ್ಕಾಚಾರ ಶುರು - ಸಿದ್ದುಗೆ ಬಾಗಲಕೋಟೆ, ಡಿಕೆಶಿಗೆ ದಾವಣಗೆರೆ ಮಹತ್ವದ್ದು ಯಾಕೆ ಗೊತ್ತಾ?]]></title>
            <link>https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i</link>
            <guid isPermaLink="true">https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i</guid>
            <pubDate>Mon, 04 May 2026 04:51:54 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶವು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಫಲಿತಾಂಶವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqr2b2ead5jwaeyc7sccnt2g,imgname-----------------------2026-05-04t045055.019-1777850485194.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.4): &lt;/strong&gt;ಪಂಚರಾಜ್ಯ ಚುನಾವಣೆ ಫಲಿತಾಂಶ ಜತೆಗೆ ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶವೂ ಸೋಮವಾರ ಹೊರ ಬೀಳಲಿದೆ. ಫಲಿತಾಂಶ ಹಾಗೂ ಅದರ ಮುಂದುವರೆದ ರಾಜಕೀಯ ಸಮೀಕರಣಗಳ ಕಾರಣಗಳಿಗೆ ಕಾಂಗ್ರೆಸ್&zwnj; ವಲಯದಲ್ಲಿ ಈ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮನೆ ಮಾಡಿದೆ.&lt;/p&gt;&lt;p&gt;ಇತರೆ ಉಪ ಚುನಾವಣೆಗಳಿಗಿಂತ ಈ ಬಾರಿಯ ಉಪ ಚುನಾವಣೆ ಹೆಚ್ಚು ಸದ್ದು ಮಾಡಿತ್ತು. ಮುಸ್ಲಿಂ ಬಾಹುಳ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಂಟಾದ ಟಿಕೆಟ್&zwnj; ತಿಕ್ಕಾಟ ಇದಕ್ಕೆ ಕಾರಣವಾಗಿತ್ತು. ಆದರೆ, ಈ ತಿಕ್ಕಾಟದ ನಡುವೆಯೂ ದಾವಣಗೆರೆ ಕಾಂಗ್ರೆಸ್ ಗೆಲುವು ಖಚಿತ ಎಂಬ ವಿಶ್ವಾಸಕ್ಕೆ ಕೈ ಪಾಳಯ ಬಂದಿದೆ. ಅಲ್ಪಸಂಖ್ಯಾತ ಮತಗಳಲ್ಲಿ ತುಸು ಗೊಂದಲ ಉಂಟಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್&zwnj;ನಿಂದ ವಿಮುಖರಾಗಿಲ್ಲ. ಜತೆಗೆ ಲಿಂಗಾಯತ ಮತಗಳು ಕ್ರೋಢೀಕರಣ ಆಗಿರುವುದರಿಂದ ದಾವಣಗೆರೆ ದಕ್ಷಿಣದಲ್ಲಿ ಭಾರಿ ಬಹುಮತ ಇಲ್ಲದಿದ್ದರೂ ಗೆಲುವಿನ ಭರವಸೆಯಲ್ಲಿ ಕಾಂಗ್ರೆಸ್&zwnj; ಇದೆ.&lt;/p&gt;&lt;p&gt;ಜತೆಗೆ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂಡ ಬೀಡುಬಿಟ್ಟಿದ್ದು ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದು, ಇದು ಕಾಂಗ್ರೆಸ್&zwnj;ಗೆ ಉತ್ತಮ ಮತ ಫಸಲು ನೀಡಿದೆ ಎಂಬ ನಂಬಿಕೆ ಕೈ ಪಾಳಯದಲ್ಲಿದೆ.&lt;/p&gt;&lt;p&gt;ಹೀಗಾಗಿ ಕಾಂಗ್ರೆಸ್ಸಿಗರಿಗೆ ಬಹುಮತದಲ್ಲಿ ವ್ಯತ್ಯಾಸಗಳಿದ್ದರೂ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್&zwnj; ಗೆಲ್ಲುವ ನಂಬಿಕೆಯಿದೆ. ಒಂದೊಮ್ಮೆ ಎರಡೂ ಕ್ಷೇತ್ರ ಸೋತರೆ ಅಧಿಕಾರ ಹಂಚಿಕೆ ಮತ್ತಿತರ ವಿಚಾರಗಳು ಮುನ್ನೆಲೆಗೆ ಬರುವ ಸಾಧ್ಯತೆಯಿದೆ.&lt;/p&gt;&lt;p&gt;ಉಪ ಚುನಾವಣೆಗಳು ಸಾಮಾನ್ಯವಾಗಿ ಅಧಿಕಾರದಲ್ಲಿರುವ ಪಕ್ಷದ ಪರವಾಗಿಯೇ ಇರುವುದು ರೂಢಿ. ಸಂಪನ್ಮೂಲ, ವ್ಯವಸ್ಥೆಯ ಬಲ, ಅನುಕಂಪದ ಲಾಭ ಮತ್ತಿತರ ಕಾರಣಗಳಿಂದ ಈ ಬಾರಿಯ ಉಪ ಚುನಾವಣೆಯಲ್ಲೂ ಆಡಳಿತಾರೂಢ ಕಾಂಗ್ರೆಸ್&zwnj;ಗೆ ಪೂರಕ ವಾತಾವರಣ ಇದೆ ಎಂಬ ಲೆಕ್ಕಾಚಾರ ಇದೆ.&lt;/p&gt;&lt;h2&gt;ಸೋತರೆ ಏನು?:&lt;/h2&gt;&lt;p&gt;ಅಕಸ್ಮಾತ್&zwnj; ಎರಡೂ ಕಡೆ ಸೋತರೆ ಏನಾಗಬಹುದು ಎಂಬ ಲೆಕ್ಕಾಚಾರವೂ ಶುರುವಾಗಿದ್ದು, ಒಂದೊಮ್ಮೆ ಎರಡೂ ಕ್ಷೇತ್ರ ಸೋತರೆ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆಯ ಮುನ್ಸೂಚನೆಯಾಗಿ ಪರಿಗಣಿಸಬಹುದು. ಪ್ರತಿಪಕ್ಷಗಳ ಧ್ವನಿಗೆ ಬಲ ಬರಬಹುದು. ಸರ್ಕಾರ ತಮ್ಮಲ್ಲಿನ ಲೋಪಗಳನ್ನು ಸರಿಪಡಿಸಿಕೊಳ್ಳಲು ಸಮಯಾವಕಾಶ ಇರುವುದರಿಂದ ಸಾರ್ವತ್ರಿಕ ಚುನಾವಣೆ ವೇಳೆಗೆ ಆಗಬೇಕಾದ ಬದಲಾವಣೆಗಳಿಗೆ ಕೈ ಹಾಕಬೇಕಾಗಬಹುದು.&lt;/p&gt;&lt;p&gt;ಎರಡರಲ್ಲಿ ಒಂದು ಸೋತು, ಒಂದು ಗೆದ್ದರೆ ಯಾವ ಕ್ಷೇತ್ರ ಸೋತಿದ್ದಾರೆ ಎಂಬುದರ ಮೇಲೆಯೇ ಫಲಿತಾಂಶದ ಪರಿಣಾಮಗಳ ಲೆಕ್ಕಾಚಾರ ಅವಲಂಬಿಸಲಿದೆ. ದಾವಣಗೆರೆ ದಕ್ಷಿಣ ಸೋತರೆ ಮುಸ್ಲಿಂ ಬಂಡಾಯದ ಕಾರಣ ನೀಡಿ ಚುನಾವಣೆಗೆ ಕೆಲಸ ಮಾಡದ ಮುಸ್ಲಿಂ ನಾಯಕರನ್ನು ಹೊಣೆ ಮಾಡಬಹುದು. ಪ್ರಚಾರಕ್ಕೆ ಸಹಕಾರ ನೀಡದ ಸಚಿವರ ಮೇಲೂ ಕ್ರಮ ಕೈಗೊಳ್ಳಬಹುದು. ಜತೆಗೆ ಇದು ಡಿ.ಕೆ.ಶಿವಕುಮಾರ್&zwnj; ಅವರು ಒತ್ತಾಯದಿಂದ ಕೊಡಿಸಿದ ಟಿಕೆಟ್ ಆಗಿರುವುದರಿಂದ ಅವರಿಗೆ ತುಸು ಹಿನ್ನಡೆ ಉಂಟಾಗಬಹುದು.&lt;/p&gt;&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂಡ ಅಹರ್ನಿಶಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಅವರದ್ದೇ ಸಮುದಾಯದ ಅಭ್ಯರ್ಥಿ ಆಗಿರುವುದಿಂದ ಹಿನ್ನಡೆ ಆಗಲ್ಲ ಎಂಬ ಗಟ್ಟಿ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಬಾಗಲಕೋಟೆ ಸೋತರೆ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಆಗಲಿದೆ.&lt;/p&gt;&lt;p&gt;ಎರಡೂ ಕ್ಷೇತ್ರ ಸೋತರೆ, ನಾಯಕತ್ವ ಬದಲಾವಣೆಯ ಚರ್ಚೆಗೆ ಇಂಬು ದೊರೆಯಬಹುದೇ ಎಂಬ ಕುತೂಹಲವಿದೆ. ಆದರೆ, ನಾಯಕತ್ವ ಬದಲಾವಣೆ ಎಂಬುದು ಉಪಚುನಾವಣೆ ಫಲಿತಾಂಶಕ್ಕಿಂತ ರಾಹುಲ್&zwnj;ಗಾಂಧಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೆಚ್ಚಾಗಿ ಅವಲಂಭಿತ ಎನ್ನುತ್ತಾರೆ ಹಿರಿಯ ಕಾಂಗ್ರೆಸ್ ನಾಯಕರು.&lt;/p&gt;&lt;p&gt;ಅವರು ಪ್ರಕಾರ ರಾಹುಲ್&zwnj;ಗಾಂಧಿ ಅವರು ಈಗಾಗಲೇ ನಾಯಕತ್ವ ಬದಲಾವಣೆ ಮಾಡಲು ಅಥವಾ ಮಾಡದಿರಲು ಸ್ಪಷ್ಟ ನಿಲುವು ತಾಳಿದ್ದರೆ ಅದನ್ನು ಬದಲು ಮಾಡುವಷ್ಟು ಪರಿಣಾಮ ಈ ಚುನಾವಣೆ ಬೀರಲಾರದು. ಈ ಕಾರಣಕ್ಕೆ ಫಲಿತಾಂಶ ಅಧಿಕಾರ ಹಂಚಿಕೆ ವಿಚಾರದಲ್ಲಿ ಗೌಣ ಆಗಲಿದೆ ಎಂಬ ವಿಶ್ಲೇಷಣೆಯೂ ಇದೆ.&lt;/p&gt;&lt;h3&gt;ಕುತೂಹಲ ಮೂಡಿಸಿದ ರಾಹುಲ್&zwnj; ನಡೆ&lt;/h3&gt;&lt;p&gt;ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಮತ್ತಿತರ ವಿಷಯಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್&zwnj; ನೇತೃತ್ವದ ಎರಡೂ ಬಣಗಳು ಪ್ರಯತ್ನಿಸಿದರೂ ರಾಹುಲ್&zwnj;ಗಾಂಧಿ ಅವರ ಯಾರ ಭೇಟಿಗೂ ಸಿಗುತ್ತಿಲ್ಲ.&lt;/p&gt;&lt;p&gt;ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಕುರಿತು ರಾಹುಲ್&zwnj;ಗಾಂಧಿ ಅವರ ಯೋಚನೆ ಏನಿದೆ ಎಂಬುದು ಎಐಸಿಸಿ ಅಧ್ಯಕ್ಷರ ಆದಿಯಾಗಿ ಯಾರಿಗೂ ಸ್ಪಷ್ಟತೆ ಇಲ್ಲ. ಹೀಗಾಗಿ ಕೈ ಪಾಳೆಯದಲ್ಲಿನ ಈ ಬಗೆಗಿನ ಕುತೂಹಲ ಮುಂದುವರೆಯುವ ಸಾಧ್ಯತೆಯಿದೆ.&lt;/p&gt;&lt;p&gt;&lt;strong&gt;ನಾಯಕರ ಮೇಲೇನು ಪರಿಣಾಮ&lt;/strong&gt;&lt;/p&gt;&lt;p&gt;- ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್&zwnj; ಪಾಳಯ&lt;/p&gt;&lt;p&gt;- ದಾವಣಗೆರೆ ಗೆದ್ದರೆ ಡಿಕೆಗೆ ಹಿರಿಮೆ, ಸೋತರೆ ಮುಸ್ಲಿಂ ಬಂಡಾಯ ನಾಯಕರ ತಲೆದಂಡ?&lt;/p&gt;&lt;p&gt;- ಬಾಗಲಕೋಟೆ ಕ್ಷೇತ್ರದಲ್ಲಿ ಸೋತರೆ ಸಿಎಂ ಸಿದ್ದರಾಮಯ್ಯಗೆ ಅಲ್ಪ ಹಿನ್ನಡೆ ಆಗುವ ಸಾಧ್ಯತೆ&lt;/p&gt;&lt;p&gt;- ಎರಡೂ ಕಡೆ ಕಾಂಗ್ರೆಸ್&zwnj; ಸೋತರೆ ನಾಯಕತ್ವ ಬದಲಾವಣೆಗೆ ಚರ್ಚೆಗೆ ಮತ್ತೆ ಇಂಬು ಸಾಧ್ಯತೆ&lt;/p&gt;&lt;p&gt;- ಆದರೆ ನಾಯಕತ್ವದ ಬದಲು ವಿಷಯದಲ್ಲಿ ರಿಸಲ್ಟ್&zwnj;ಗಿಂತ ರಾಹುಲ್&zwnj; ಮನದಾಳವೇ ಅಂತಿಮ&lt;/p&gt;&lt;p&gt;ಕನ್ನಡಪ್ರಭ ವಾರ್ತೆ&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i"/>
        </item>
        <item>
            <title><![CDATA[ಬಾಗಲಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು, ಉಮೇಶ್ ಮೇಟಿ 22 ಸಾವಿರ ಅಂತರದಿಂದ ಗೆಲುವು, ಮುಗಿಲು ಮುಟ್ಟಿದ ಸಂಭ್ರಮ]]></title>
            <link>https://kannada.asianetnews.com/politics/congress-wins-bagalkot-by-election-2026-umesh-meti-defeats-bjp-veeranna-charantimath-gdp/articleshow-acc9isa</link>
            <guid isPermaLink="true">https://kannada.asianetnews.com/politics/congress-wins-bagalkot-by-election-2026-umesh-meti-defeats-bjp-veeranna-charantimath-gdp/articleshow-acc9isa</guid>
            <pubDate>Mon, 04 May 2026 12:37:31 +0530</pubDate>
            <description><![CDATA[ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಗೆಲುವು ದಾಖಲಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kqrwdb1v93amws1cr6nmvvyn,imgname----------1777877822522.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ ವೀರಣ್ಣ ಚರಂತಿಮಠ ಅವರಿಗೆ ಸೋಲಾಗಿದೆ. ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿರುವ ಮೇಟಿ ಅವರ ಗೆಲುವು ಬಹುತೇಕ ಖಚಿತವಾಗಿರುವ ಸೂಚನೆಗಳು ದೊರೆಯುತ್ತಿದ್ದಂತೆಯೇ ಕಾರ್ಯಕರ್ತರು ಸಂಭ್ರಮಿಸಲು ಆರಂಭಿಸಿದ್ದವು. ಈಗ ಅವರ ಸಂಭ್ರಮ ಮುಗಿಲು ಮುಟ್ಟಿದೆ.&lt;/p&gt;&lt;p&gt;ಉಮೇಶ್ ಮೇಟಿ ಪಡೆದ ಮತಗಳು-97,941&lt;/p&gt;&lt;p&gt;ವೀರಣ್ಣ ಚರಂತಿಮಠ ಪಡೆದ ಮತಗಳು- 76,075&lt;/p&gt;&lt;p&gt;ಮತಗಳ ಅಂತರ- 22,867&lt;/p&gt;&lt;h2&gt;ಸುತ್ತುಸುತ್ತಿನಲ್ಲೂ ಮೇಟಿ ಮುನ್ನಡೆ&lt;/h2&gt;&lt;p&gt;ಮತ ಎಣಿಕೆಯ ಆರಂಭದಿಂದಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಥಿರ ಮುನ್ನಡೆ ಸಾಧಿಸಿ ಪ್ರತಿಯೊಂದು ಸುತ್ತಿನಲ್ಲೂ ತಮ್ಮ ಮುನ್ನಡೆಯನ್ನು ವಿಸ್ತರಿಸಿಕೊಂಡರು. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು, ಉಮೇಶ್ ಮೇಟಿ ಗೆಲುವಿಗೆ ಘೋಷಣೆಗಳನ್ನು ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು ಹಾಗೂ ನಾಯಕರ ಫೋಟೋಗಳನ್ನು ಹಿಡಿದು ಉತ್ಸಾಹಭರಿತವಾಗಿ ಜಯಘೋಷ ಮಾಡುವ ದೃಶ್ಯಗಳು ಗಮನ ಸೆಳೆಯುತ್ತಿವೆ.&lt;/p&gt;&lt;h2&gt;ಉಪಚುನಾವಣೆಯ ಹಿನ್ನೆಲೆ&lt;/h2&gt;&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.&lt;/p&gt;&lt;h2&gt;ಟಿಕೆಟ್ ಹಂಚಿಕೆಯಲ್ಲಿ ಕುಟುಂಬದ ಒಳಪೈಪೋಟಿ&lt;/h2&gt;&lt;p&gt;ಚುನಾವಣೆಗೆ ಮುನ್ನ ಮೇಟಿ ಕುಟುಂಬದೊಳಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ತೀವ್ರ ಪೈಪೋಟಿ ಉಂಟಾಗಿ ಭಿನ್ನಮತವೂ ವ್ಯಕ್ತವಾಗಿತ್ತು. ಅಂತಿಮವಾಗಿ ಪಕ್ಷದ ಹೈಕಮಾಂಡ್ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಿತ್ತು. ಒಟ್ಟು 14 ಟೇಬಲ್&zwnj;ಗಳ ಮೂಲಕ 23 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು, ಕಾಂಗ್ರೆಸ್&zwnj;ಗೆ ಈ ಕ್ಷೇತ್ರದಲ್ಲಿ ಸ್ಪಷ್ಟ ಜಯ ಸಿಕ್ಕಿದೆ. ಅಂತಿಮ ಫಲಿತಾಂಶ ಅಧಿಕೃತವಾಗಿ ಚುನಾವಣಾ ಆಯೋಗ ಘೋಷನೆ ಮಾಡುವುದು ಮಾತ್ರ ಬಾಕಿ ಇದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/politics/congress-wins-bagalkot-by-election-2026-umesh-meti-defeats-bjp-veeranna-charantimath-gdp/articleshow-acc9isa"/>
        </item>
        <item>
            <title><![CDATA[ಬಾಗಲಕೋಟೆ ಬಿಜೆಪಿ ಸೋಲಿಗೆ 'ಕೈ' ಅಲ್ಲ, ಈ ಮೂವರು ನಾಯಕರ 'ನಾಲಗೆ'ಗಳೇ ಕಾರಣ; ಆ ಒಂದು ಫೋನ್ ಕರೆಯಲ್ಲಿ ಬಯಲು!]]></title>
            <link>https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5</link>
            <guid isPermaLink="true">https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5</guid>
            <pubDate>Tue, 05 May 2026 16:35:13 +0530</pubDate>
            <description><![CDATA[&lt;p&gt;ಬಾಗಲಕೋಟೆಯಲ್ಲಿ ಬಿಜೆಪಿಯ ಸೋಲಿಗೆ ವಿರೋಧ ಪಕ್ಷಕ್ಕಿಂತ ಸ್ವಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳೇ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಚಾರದ ವೇಳೆ ಸಿ.ಸಿ. ಪಾಟೀಲ್, ಪ್ರತಾಪ್ ಸಿಂಹ, ಮತ್ತು ಯತ್ನಾಳ್ ಅವರ ಮಾತುಗಳು ಕುರುಬ, ಅಲ್ಪಸಂಖ್ಯಾತ ಹಾಗೂ ಲಿಂಗಾಯತ ಸಮುದಾಯಗಳ ಮತಗಳು ಕೈತಪ್ಪಲು ಕಾರಣವಾದವ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqvwm0kt27rpky2vsnb1r224,imgname-----------------------2026-05-05t162806.439-1777978704506.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:(ಮೇ.5)&lt;/strong&gt; ಸುಲಭವಾಗಿ ಗೆಲ್ಲಬಹುದಾಗಿದ್ದ ಕ್ಷೇತ್ರದಲ್ಲಿ ಬಿಜೆಪಿ ಮಕಾಡೆ ಮಲಗಿದ್ದು ಯಾಕೆ? ಭದ್ರಕೋಟೆಯಲ್ಲೇ ಕಮಲ ಬಾಡಲು ಕಾರಣವೇನು? ಪ್ರಚಾರದ ಹಾದಿಯಲ್ಲಿ ಆದ ಎಡವಟ್ಟುಗಳೇನು? &ndash; ಹೀಗೆ ಸಾಲು ಸಾಲು ಪ್ರಶ್ನೆಗಳನ್ನಿಟ್ಟುಕೊಂಡು ಬಾಗಲಕೋಟೆ ಬಿಜೆಪಿ ಪಾಳಯದಲ್ಲಿ ಈಗ ತೀವ್ರ ಆತ್ಮಾವಲೋಕನ ಶುರುವಾಗಿದೆ.&lt;/p&gt;&lt;p&gt;ವಿಶೇಷವೆಂದರೆ, ಈ ಸೋಲಿಗೆ ವಿರೋಧ ಪಕ್ಷದವರ ಅಬ್ಬರದ, ಪ್ರಚಾರಕ್ಕಿಂತಲೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದ ಸ್ವಪಕ್ಷದ ಸ್ಟಾರ್ ನಾಯಕರ ಆಕ್ಷೇಪಾರ್ಹ ಹೇಳಿಕೆಗಳೇ ಅಹಿಂದ ಮತಗಳನ್ನು ಕೆರಳಿಸಿ, ಬಿಜೆಪಿಯ ಕೈ ಹಿಡಿಯಬೇಕಿದ್ದ ಮತಗಳನ್ನು ದೂರ ಮಾಡಿವೆ ಎಂಬ ಆರೋಪಗಳು ಕೇಳಿಬಂದಿವೆ.&lt;/p&gt;&lt;h2&gt;ಈ ಮೂವರ ನಾಯಕರ ಹೇಳಿಕೆಗಳಿಂದಲೇ ಸೋಲು?&lt;/h2&gt;&lt;p&gt;ಈ ಮೂವರು ನಾಯಕರ ಹೇಳಿಕೆಗಳೇ ತಮ್ಮ ಅಭ್ಯರ್ಥಿ ಸೋಲಿಗೆ ಕಾರಣವಾಯ್ತಾ?&lt;/p&gt;&lt;p&gt;ಪ್ರಚಾರದ ವೇಳೆ ಪ್ರತಾಪ್ ಸಿಂಹ, &zwnj;ಸಿಸಿ&zwnj; ಪಾಟೀಲ್, ಯತ್ನಾಳ್ ಹೇಳಿಕೆಗಳೇ ಮುಳುವಾಯ್ತಾ ಮೂವರು &zwnj;ನಾಯಕರು ಕೊಟ್ಟ&zwnj; ಹೇಳಿಕೆಗಳೇ&zwnj; ಪ್ರಬಲ ಸಮುದಾಯದ ಮತಗಳ ಒಡಕಿಗೆ ಕಾರಣವಾಯ್ತಾ? ಹಾಗಾದರೆ ಈ ಮೂವರು ನಾಯಕರು ಪ್ರಚಾರದ ವೇಳೆ ಹೇಳಿದ್ದೇನು?&lt;/p&gt;&lt;h3&gt;ಸಿಎಂ ಸಿದ್ದರಾಮಯ್ಯಗೆ ಟುರ್.. ಎಂದಿದ್ದ ಸಿಸಿ ಪಾಟೀಲ್&lt;/h3&gt;&lt;p&gt;ಪ್ರಚಾರದ ವೇಳೆ ಮಾಜಿ ಸಚಿವ ಸಿಸಿ ಪಾಟೀಲ್ ನೀಡಿದ ಹೇಳಿಕೆಗಳು ಎರಡು ಪ್ರಬಲ ಸಮುದಾಯಗಳನ್ನು ಬಿಜೆಪಿಯ ವಿರುದ್ಧ ತಿರುಗಿಬೀಳುವಂತೆ ಮಾಡಿದೆ ಎಂಬ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಪರೋಕ್ಷವಾಗಿ 'ಟುರ್..' ಎಂದು ಉದ್ಗರಿಸಿದ್ದು ಕುರುಬ ಸಮುದಾಯದ ಕೆಂಗಣ್ಣಿಗೆ ಗುರಿಯಾದ್ರೆ, 'ಗಡ್ಡದವರನ್ನ ಸೋಲಿಸಬೇಕು' ಎನ್ನುವ ಮೂಲಕ ಅಲ್ಪಸಂಖ್ಯಾತ ಸಮುದಾಯವನ್ನು ನೇರವಾಗಿ ನಿಂದಿಸಿದ್ದು ಕೂಡ ಪೆಟ್ಟು ನೀಡಿದೆ. ಪಂಚಮಸಾಲಿ ಸಭೆಯಲ್ಲಿ ಸಿಸಿ ಪಾಟೀಲ್ ನೀಡಿದ ಇಂತಹ ಪೀಕಲಾಟದ ಹೇಳಿಕೆಗಳು ಮತಗಳ ಒಡಕಿಗೆ ನೇರ ಕಾರಣವಾಯ್ತು ಎಂದು ಸ್ಥಳೀಯ ನಾಯಕರು ದೂರಿದ್ದಾರೆ.&lt;/p&gt;&lt;h3&gt;ಪ್ರತಾಪ್ ಸಿಂಹ ಹೇಳಿಕೆಯಿಂದ 35 ಸಾವಿರ ಕುರುಬ ಮತಗಳಿಗೆ ಬಿತ್ತು ಕತ್ತರಿ?&lt;/h3&gt;&lt;p&gt;ಕ್ಷೇತ್ರದಲ್ಲಿ ಸರಿಸುಮಾರು 35 ಸಾವಿರದಷ್ಟಿರುವ ಕುರುಬ ಸಮುದಾಯದ ಮತಗಳು ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಬೇಕಿತ್ತು. ಆದರೆ, ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯನವರ ಬಗ್ಗೆ ನೀಡಿದ 'ತುದಿ ಕಟ್ ಮಾಡಿಸಿಕೊಳ್ಳಲಿ' ಎಂಬ ಅಶ್ಲೀಲ ಹಾಗೂ ವೈಯಕ್ತಿಕ ನಿಂದನೆಯ ಹೇಳಿಕೆ ಇಡೀ ಸಮುದಾಯವನ್ನು ಬಿಜೆಪಿ ವಿರುದ್ಧ ಕೆರಳಿಸಿತು.&lt;/p&gt;&lt;p&gt;ಈ ಹೇಳಿಕೆಯಿಂದ ಬೇಸತ್ತ ಸಮುದಾಯದ ಮತದಾರರು ಬಿಜೆಪಿಯನ್ನು ಕೈಬಿಟ್ಟು ಒಗ್ಗಟ್ಟಾಗಿ ಕಾಂಗ್ರೆಸ್ ಪರ ನಿಂತರು. ಒಬ್ಬ ನಾಯಕನ ಅತಿರೇಕದ ಮಾತುಗಳು ಪಕ್ಷಕ್ಕೆ ಬರಬೇಕಿದ್ದ ಮತಗಳನ್ನು ಹೇಗೆ ಗುಡಿಸಿ ಹಾಕುತ್ತವೆ ಎಂಬುದಕ್ಕೆ ಪ್ರತಾಪ್ ಸಿಂಹ ಅವರ ಈ ಹೇಳಿಕೆಯೇ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ.&lt;/p&gt;&lt;h3&gt;ಸ್ವಪಕ್ಷೀಯರನ್ನೇ ಟೀಕಿಸಿ ಗೆಲುವಿನ ಹಾದಿಗೆ ಮುಳ್ಳಾದ್ರೆ ಯತ್ನಾಳ್?&lt;/h3&gt;&lt;p&gt;ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಡಾಫೆಯ ನಡೆ ಕೂಡ ಪಕ್ಷದ ಒಳಗೆ ದೊಡ್ಡ ಬಿರುಕು ಮೂಡಿಸಿದೆ. ಪ್ರಚಾರಕ್ಕೆ ಬಂದಿದ್ದ ಸ್ವಪಕ್ಷದ ನಾಯಕರನ್ನೇ 'ಸೋತವರೆಲ್ಲಾ ಇಲ್ಲಿಗೆ ಮತ ಕೇಳಲು ಬಂದಿದ್ದಾರೆ' ಎಂದು ಲೇವಡಿ ಮಾಡಿದ್ದು ಮತದಾರರಲ್ಲಿ ತಪ್ಪು ಸಂದೇಶ ರವಾನಿಸಿದೆ. ವಿಜಯಪುರದಿಂದ ಬಂದಿದ್ದ ನಾಯಕರನ್ನು ಅವಮಾನಿಸಿದ್ದು ಮಾತ್ರವಲ್ಲದೆ, ಪ್ರಚಾರದುದ್ದಕ್ಕೂ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಕಿಡಿಕಾರಿದ್ದು ಲಿಂಗಾಯತ ಮತಗಳ ಮೇಲೆ ಹೊಡೆತ ಬಿದ್ದಿದೆ. ತನ್ನದೇ ಪಕ್ಷದ ಹಿರಿಯ ನಾಯಕರನ್ನು ಬೈದುಕೊಂಡು ಓಡಾಡಿದ ಯತ್ನಾಳ್ ವರ್ತನೆಯಿಂದಾಗಿ ಮತದಾರರು ಬಿಜೆಪಿಯಿಂದ ಅಂತರ ಕಾಯ್ದುಕೊಂಡರು ಎಂಬ ಅಸಮಾಧಾನ ವ್ಯಕ್ತವಾಗಿದೆ.&lt;/p&gt;&lt;p&gt;ಸ್ಥಳೀಯ ನಾಯಕರ ಆಕ್ರೋಶ, ಫೋನ್ ಕರೆಯಲ್ಲಿ ಬಯಲು!&lt;/p&gt;&lt;p&gt;ಕಳೆದ ರಾತ್ರಿ ಕ್ಷೇತ್ರದ ಸ್ಥಳೀಯ ನಾಯಕರು ಮತ್ತು ಪ್ರಮುಖ ಮುಖಂಡರು ಫೋನ್ ಮೂಲಕ ನಡೆಸಿದ ಸಂಭಾಷಣೆಯಲ್ಲಿ ಈ ಎಲ್ಲಾ ಕಹಿ ಸತ್ಯಗಳು ಹೊರಬಂದಿವೆ. 'ನಾಯಕರು ಬಂದು ಗೆಲುವಿಗೆ ದಾರಿಯಾಗುವ ಬದಲು, ಅವರ ನಾಲಿಗೆಯಿಂದಾಗಿಯೇ ನಾವು ಸೋಲುವಂತಾಯ್ತು' ಎಂದು ಮುಖಂಡರು ಬೇಸರ ಹೊರಹಾಕಿದ್ದಾರೆ. ಸದ್ಯ ಬಾಗಲಕೋಟೆ ಬಿಜೆಪಿಯಲ್ಲಿ ಈ 'ಸೆಲ್ಫ್ ಗೋಲ್' ಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.&lt;/p&gt;&lt;p&gt;ಈ ಸೋಲಿನ ನಂತರ ಪಕ್ಷದ ಹೈಕಮಾಂಡ್ ಈ ನಾಯಕರ ಹೇಳಿಕೆಗಳ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5"/>
        </item>
        <item>
            <title><![CDATA[ಬಾಗಲಕೋಟೆ ಉಪಚುನಾವಣೆ: ಇಂದು ತೋವಿವಿಯಲ್ಲಿ ಮತ ಎಣಿಕೆ; ನಿಷೇಧಾಜ್ಞೆ ಜಾರಿ]]></title>
            <link>https://kannada.asianetnews.com/politics/bagalkot-by-election-results-2026-countdown-to-vote-counting-at-horticulture-university-today-rav/articleshow-cuu9rl6</link>
            <guid isPermaLink="true">https://kannada.asianetnews.com/politics/bagalkot-by-election-results-2026-countdown-to-vote-counting-at-horticulture-university-today-rav/articleshow-cuu9rl6</guid>
            <pubDate>Mon, 04 May 2026 07:36:58 +0530</pubDate>
            <description><![CDATA[ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಬಿಗಿ ಭದ್ರತೆ, ಸಿಬ್ಬಂದಿ ನಿಯೋಜನೆ ಮತ್ತು ನಿಷೇಧಾಜ್ಞೆ ಜಾರಿ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqrbn9psynyd537q8rj8cdvy,imgname-----------------------2026-05-04t073403.087-1777860257497.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮೇ.4)&lt;/strong&gt;: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.&lt;/p&gt;&lt;p&gt;ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು, ಚುನಾವಣೆ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಬೆಳಗ್ಗೆ 7 ಗಂಟೆಗೆ ಹಾಜರಿರಲು ತಿಳಿಸಲಾಗಿದೆ. ಭದ್ರತಾ ಕೊಠಡಿಯನ್ನು ಬೆಳಗ್ಗೆ 7 ಗಂಟೆಗೆ ಚುನಾವಣೆ ವೀಕ್ಷಕರ, ಅಭ್ಯರ್ಥಿಗಳ, ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುತ್ತಿದೆ.&lt;/p&gt;&lt;p&gt;ಇವಿಎಂ ಮತ ಏಣಿಕೆ ಕಾರ್ಯಕ್ಕಾಗಿ ನೆಲ ಮಹಡಿಯ ರೂಮ್ ನಂ.4ರಲ್ಲಿ 14 ಟೇಬಲ್&zwnj; ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆಗಾಗಿ ನೆಲ ಮಹಡಿಯ 9ರ ಕೊಠಡಿಯಲ್ಲಿ ಒಂದು ಟೇಬಲ್ ಹಾಗೂ ಇಟಿಪಿಬಿಎಸ್ ಸ್ಕ್ಯಾನಿಂಗ್&zwnj;ಗಾಗಿ ಕೊಠಡಿ ಸಂ.9ರಲ್ಲಿ ಒಂದು ಟೇಬಲ್&zwnj; ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್&zwnj;ಗೆ ತಲಾ ಒಬ್ಬರು ಎಣಿಕೆ ಮೇಲ್ವಿಚಾರಕ, ಎಣಿಕೆ ಸಹಾಯಕ ಹಾಗೂ ಮೈಕ್ರೋ ಅಬ್ಸರ್ವರ್ ನೇಮಕ ಮಾಡಲಾಗಿದೆ. ಪ್ರತಿ ಟೇಬಲ್&zwnj;ಗೆ ಓರ್ವ ಸಹಾಯಕ ಚುನಾವಣಾಧಿಕಾರಿಗಳು ಇರಲಿದ್ದಾರೆ.&lt;/p&gt;&lt;p&gt;ಸೇವಾ ಮತದಾರರಿಂದ ಸ್ವೀಕರಿಸಲ್ಪಡುವ ಅಂಚೆ ಮತಪತ್ರಗಳ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಸಲುವಾಗಿ ಒಂದು ಟೇಬಲ್&zwnj; ಮಾಡಲಾಗಿದ್ದು, ಓರ್ವ ಸ್ಕ್ಯಾನಿಂಗ್ ಮೇಲ್ವಿಚಾರಕರು, ಓರ್ವ ಅಸಿಸ್ಟಂಟ್ ಹಾಗೂ ಇಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಕಾಯ್ದಿಟ್ಟ ಸಿಬ್ಬಂದಿ ಸೇರಿದಂತೆ ಎಣಿಕೆ ಕಾರ್ಯಕ್ಕೆ ಒಟ್ಟು 63 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಸುತ್ತುವಾರು ಮತ ಎಣಿಕೆಯಾದ ವಿವರವನ್ನು ಪಬ್ಲಿಕ್ ಅಡ್ರೇಸ್ ಸಿಸ್ಟಮ್ ವ್ಯವಸ್ಥೆ ಮಾಡಲಾಗಿದೆ&lt;/p&gt;&lt;p&gt;ಅಭ್ಯರ್ಥಿ, ಅಭ್ಯರ್ಥಿ ಎಜೆಂಟರಿಗೆ ಮತ ಎಣಿಕೆ ಪೂರ್ವ ದಿಕ್ಕಿನಲ್ಲಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಏಜೆಂಟರಿಗೆ ಮುಖ್ಯ ದ್ವಾರದಲ್ಲಿ ಪ್ರವೇಶ ಇರುವುದಿಲ್ಲ. ಸದರಿ ವಾಹನಗಳಿಗೆ ಮುಖ್ಯದ್ವಾರದ 200 ಮೀಟರ್ ಮುಂಚಿತವಾಗಿ ಇರುವ ಜಿಲ್ಲಾ ಪಶು ಸಂಗೋಪನಾ ಆಸ್ಪತ್ರೆ ಎದುರುಗಡೆ ಹೋಗುವ ರಸ್ತೆ ಮುಖಾಂತರ ಮತ ಎಣಿಕೆ ಕೇಂದ್ರದಿಂದ ಸುಮಾರು 200 ಮೀಟರ್ ಅಂತರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗೆ ಹಾಗೂ ಮಾಧ್ಯಮದವರಿಗೆ ಮಾತ್ರ ಮುಖ್ಯ ದ್ವಾರದಿಂದ ಪ್ರವೇಶವಿರುತ್ತದೆ. ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿದೆ&lt;/p&gt;&lt;p&gt;ನಿಷೇಧಾಜ್ಞೆ ಜಾರಿ: ಮೇ 4ರ ಬೆಳಗ್ಗೆ 6 ಗಂಟೆಯಿಂದ ಮೇ 5ರ ಬೆಳಗ್ಗೆ 6 ಗಂಟೆವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ನ್ನು ಜಾರಿ ಮಾಡಿ ಆದೇಶಿಸಲಾಗಿದೆ. ಅಲ್ಲದೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ 10 ಕಿ.ಮೀ ವ್ಯಾಪ್ತಿಯಲ್ಲಿ ಮೇ 4ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಧ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟಲ್, ಕ್ಲಬ್, ಡಾಬಾ ಮತ್ತು ಇನ್ನೀತರ ಸ್ಥಳಗಳಲ್ಲಿ ಮಧ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bagalkot-by-election-results-2026-countdown-to-vote-counting-at-horticulture-university-today-rav/articleshow-cuu9rl6"/>
        </item>
        <item>
            <title><![CDATA[ವಿಜಯನಗರ: ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ  ಆಸ್ಪತ್ರೆ  ನೌಕರ!]]></title>
            <link>https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</link>
            <guid isPermaLink="true">https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</guid>
            <pubDate>Sat, 09 May 2026 09:59:34 +0530</pubDate>
            <description><![CDATA[ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ &lsquo;ಡಿ&rsquo; ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್&zwnj;ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr5fw7c89a7qp4hbqykppja9,imgname-vijayanagara-hospital-assault-case-1778300886406.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ &lt;/strong&gt;ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರ&lt;/h2&gt;&lt;p&gt;ಆರೋಪಿಯು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್&zwnj;ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;ಪೋಕ್ಸೋ ಅಡಿ ಪ್ರಕರಣ ದಾಖಲು&lt;/h2&gt;&lt;p&gt;ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.&lt;/p&gt;&lt;p&gt;ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132"/>
        </item>
        <item>
            <title><![CDATA[ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳು ಯಾರ ಮಡಿಲಿಗೆ? - ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಹಣಾಹಣಿ, ಬೆಳಗ್ಗೆ 8ರಿಂದ ಎಣಿಕೆ, 12ರ ವೇಳೆಗೆ ರಿಸಲ್ಟ್‌]]></title>
            <link>https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6</link>
            <guid isPermaLink="true">https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6</guid>
            <pubDate>Mon, 04 May 2026 04:31:59 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಫಲಿತಾಂಶದ ಕುತೂಹಲ ಹೆಚ್ಚಾಗಿದೆ. ಕಾಂಗ್ರೆಸ್&zwnj;ನ ಹಿರಿಯ ನಾಯಕರ ನಿಧನದಿಂದ ತೆರವಾದ ಈ ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knk7qxj2bqj0n5p30x9ftb86,imgname----------------------83--1775540893250.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ/ಬಾಗಲಕೋಟೆ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ಸೋಮವಾರ ನಡೆಯಲಿದೆ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್&zwnj;ನ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್&zwnj;ನ ಎಚ್.ವೈ.ಮೇಟಿ ಅವರ ನಿಧನದಿಂದ ಸ್ಥಾನಗಳು ತೆರವಾಗಿದ್ದು, ಏ.9ರಂದು ಮತದಾನ ನಡೆದಿತ್ತು.&lt;/p&gt;&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ನಗರದ ಡಿ.ಆರ್.ಆರ್.ವಿದ್ಯಾಸಂಸ್ಥೆಯಲ್ಲಿ, ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದ್ದು, 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ.&lt;/p&gt;&lt;p&gt;ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಗೇಟಿನಿಂದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್&zwnj; ಬಂದೋಬಸ್ತ್&zwnj; ಏರ್ಪಡಿಸಲಾಗಿದೆ.&lt;/p&gt;&lt;h2&gt;ಕಾಂಗ್ರೆಸ್&zwnj;-ಬಿಜೆಪಿ ಸಮರ:&lt;/h2&gt;&lt;p&gt;ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್&zwnj; ಹಾಗೂ ಬಿಜೆಪಿ ನಡುವೆ ಬಿಗ್&zwnj; ಫೈಟ್&zwnj; ಏರ್ಪಟ್ಟಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಸೇರಿದಂತೆ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.&lt;/p&gt;&lt;h3&gt;&lsquo;ಕೈ&rsquo;ಗೆ ಎದುರಾದ ಭಿನ್ನಮತ:&lt;/h3&gt;&lt;p&gt;ಕಾಂಗ್ರೆಸ್&zwnj;ಗೆ ಎರಡೂ ಕ್ಷೇತ್ರದಲ್ಲಿ ಭಿನ್ನಮತ ಎದುರಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್&zwnj; ಟಿಕೆಟ್&zwnj;ಗೆ ಪಟ್ಟು ಹಿಡಿದಿದ್ದರಿಂದ ಸಮಸ್ಯೆ ಎದುರಾಗಿತ್ತು. ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತ ನಾಯಕರಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಬಳಿಕ, ಕಣದಿಂದ ನಿವೃತ್ತಿಯಾಗಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ಆರಂಭದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದೆ ಅಂತರ ಕಾಯ್ದುಕೊಂಡಿದ್ದರು. ಅಂತಿಮವಾಗಿ, 14 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಾಂಗ್ರೆಸ್&zwnj;ಗೆ ಬಂಡಾಯವಾಗಿ, ಪಕ್ಷೇತರರಾಗಿ ಕಣದಲ್ಲಿದ್ದಾರೆ.&lt;/p&gt;&lt;p&gt;ಇನ್ನು, ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್&zwnj;ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6"/>
        </item>
        <item>
            <title><![CDATA[ಜಾತ್ರೆಗೆ ದೇಣಿಗೆ ಕೊಡದಿದ್ದಕ್ಕೆ 7 ಕುಟುಂಬಗಳಿಗೆ ಬಹಿಷ್ಕಾರ, ಜಮಖಂಡಿಯಲ್ಲಿ ನಡೆದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ!]]></title>
            <link>https://kannada.asianetnews.com/karnataka-districts/7-families-boycotted-for-not-donating-to-the-village-fair-incident-happended-jamakhandi-bagalkote-rav/articleshow-oric8at</link>
            <guid isPermaLink="true">https://kannada.asianetnews.com/karnataka-districts/7-families-boycotted-for-not-donating-to-the-village-fair-incident-happended-jamakhandi-bagalkote-rav/articleshow-oric8at</guid>
            <pubDate>Sat, 02 May 2026 07:47:37 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ, ಜಾತ್ರೆಗೆ ಪಟ್ಟಿ ಹಣ ನೀಡದ ಕಾರಣಕ್ಕೆ 7 ಕುಟುಂಬಗಳನ್ನು ಬಹಿಷ್ಕಾರ ಮಾಡಲಾಗಿದೆ. ಈ ಅಮಾನವೀಯ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ತಹಸೀಲ್ದಾರ್&zwnj; ಅವರು ಪೊಲೀಸ್ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqk7h4hks9p4vh37hwhqntwz,imgname-----------------------2026-05-02t074532.284-1777688154675.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಮಖಂಡಿ (ಏ.20): &lt;/strong&gt;ಜಾತ್ರೆಗೆ ಪಟ್ಟಿಕೊಟ್ಟಿಲ್ಲ ಎಂಬ ಕಾರಣಕ್ಕೆ ಗ್ರಾಮದ 7 ಕುಟುಂಬಗಳನ್ನು ಬಹಿಷ್ಕಾರ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಣಸಿಕಟ್ಟಿಯಲ್ಲಿ ಏ.5ರಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ತಹಸೀಲ್ದಾರ್&zwnj; ಅನಿಲ ಬಡಿಗೇರ ಸೂಚನೆ ನೀಡಿದ್ದಾರೆ.&lt;/p&gt;&lt;p&gt;ಹುಣಸಿಕಟ್ಟಿ ಗ್ರಾಮದಲ್ಲಿ ಏ.2ರಂದು ಹನುಮಂತ ದೇವರ ಒಕುಳಿ ಜಾತ್ರೆ ನಡೆದಿತ್ತು. ಇದಕ್ಕೆ 7 ಕುಟುಂಬಗಳು ₹600 ಪಟ್ಟಿ ಹಣ ಕೊಟ್ಟಿರಲಿಲ್ಲ. ಹಾಗಾಗಿ ಗ್ರಾಮಸ್ಥರಿಗೆ ವಿರುದ್ಧವಾಗಿ ಈ 7 ಕುಟುಂದವರು ನಡೆದುಕೊಂಡಿದ್ದು, ಇವರ ಮನೆಯ ಯಾವುದೇ ಕಾರ್ಯಕ್ರಮಗಳಲ್ಲಿ ಯಾರು ಭಾಗವಹಿಸದಂತೆ ಏ.5ರಂದು ಊರಿನ ಹಿರಿಯರೆಲ್ಲರೂ ಸೇರಿ ಡಂಗೂರ ಸಾರಿದ್ದರು. ಈ ಬಹಿಷ್ಕಾರ ಪ್ರಶ್ನಿಸಿ ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಲ್ಲಪ್ಪ ಛಗನ್ನವರ ಅವರು, ಜಮಖಂಡಿ ತಹಸೀಲ್ದಾರ, ಎಸಿ, ಡಿಸಿ ಅವರಿಗೇ ದೂರು ಅರ್ಜಿ ಸಲ್ಲಿಸಿ ಕ್ರಮಕ್ಕಾಗಿ ಆಗ್ರಹಿಸಿದ್ದರು.&lt;/p&gt;&lt;p&gt;ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಹಿರಿಯರು ಹಾಗೂ 7 ಕುಟುಂಬಗಳನ್ನು ಸಂಧಾನ ಸಭೆಗೆ ಆಹ್ವಾನಿಸಿದ್ದರು. ಆದರೆ, ದೂರುದಾರರು ಸಭೆಗೆ ಬಾರದ ಕಾರಣ ಸಭೆಯನ್ನು ನಡೆಸಲಾಗಲಿಲ್ಲ.&lt;/p&gt;&lt;p&gt;ಯಲ್ಲಪ್ಪ ಛಗನ್ನವರ, ಅಣ್ಣಪ್ಪ ಕಡಪಟ್ಟಿ, ಸಿದ್ದಪ್ಪ ಎಣ್ಣಿ, ಕರೆಪ್ಪ ಎಣ್ಣಿ, ಯಲ್ಲಪ್ಪ ಕುಲ್ಲೊಳ್ಳಿ, ಮಲ್ಲಪ್ಪ ಬಟಕುರ್ಕಿ, ರಾಮಪ್ಪ ಬಟಕುರ್ಕಿ ಕುಟುಂಬದ ಸದಸ್ಯರು ಸಭೆಯಲ್ಲಿ ಭಾಗವಹಿಸಲಿಲ್ಲ. ಯಲ್ಲಪ್ಪ ಛಗನ್ನವರ ಎಂಬುವರು ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಬಹಿಷ್ಕಾರಗೊಂಡ ಕುಟುಂಬದವರು ಅಧಿಕಾರಿಗಳು ಕರೆದ ಸಭೆಯಲ್ಲಿ ಭಾಗವಹಿಸದ ಕಾರಣ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ತಿಳಿಸಲಾಗಿದೆ.&lt;/p&gt;&lt;p&gt;&lt;strong&gt;-ಅನಿಲ ಬಡಿಗೇರ, ತಹಸೀಲ್ದಾರ್&zwnj;, ಜಮಖಂಡಿ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/7-families-boycotted-for-not-donating-to-the-village-fair-incident-happended-jamakhandi-bagalkote-rav/articleshow-oric8at"/>
        </item>
        <item>
            <title><![CDATA[ಅಪ್ಪನ ಸ್ಥಾನ ಉಳಿಸಿಕೊಂಡ ಉಮೇಶ್‌ ಮೇಟಿ; ಬಿಜೆಪಿಯ ಚರಂತಿಮಠ ವಿರುದ್ಧ 22332 ಮತಗಳ ಅಂತರದ ಜಯ]]></title>
            <link>https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf</link>
            <guid isPermaLink="true">https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf</guid>
            <pubDate>Tue, 05 May 2026 05:31:18 +0530</pubDate>
            <description><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqrwdb1v93amws1cr6nmvvyn,imgname----------1777877822522.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಬಹುನಿರೀಕ್ಷಿತ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.&lt;/p&gt;&lt;p&gt;ಉಮೇಶ ಮೇಟಿ 98,919 ಮತ ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ವೀರಣ್ಣ ಚರಂತಿಮಠ 76,587 ಮತ ಪಡೆದು ಪರಾಜಯ ಹೊಂದಿದ್ದಾರೆ.&lt;/p&gt;&lt;p&gt;ಬಾಗಲಕೋಟೆಯಲ್ಲಿ ಕಾಂಗ್ರೆಸ್&zwnj;ನ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಏ.9ರಂದು ಮತದಾನ ನಡೆದಿತ್ತು. ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್&zwnj;ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಕಾಂಗ್ರೆಸ್&zwnj; ಉಮೇಶ್ ಮೇಟಿಗೆ ಟಿಕೆಟ್&zwnj; ನೀಡಿದ್ದು, ಅವರೀಗ 22,332 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, ಉಳಿದವರು ಠೇವಣಿ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.&lt;/p&gt;&lt;h2&gt;&lt;strong&gt;ಮೊದಲ ಬಾರಿಗೆ ವಿಧಾನಸಭೆಗೆ&lt;/strong&gt;&lt;/h2&gt;&lt;p&gt;ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು 22,332 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್&zwnj;ನ ಉಮೇಶ ಮೇಟಿ ಮೊದಲ ಬಾರಿಗೆ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ನವನಗರದ ತೋಟಗಾರಿಕೆ ವಿವಿಯಲ್ಲಿ ನಡೆದ ಮತ ಎಣಿಕೆಯಲ್ಲಿ ಅಭೂತಪೂರ್ವ ಗೆಲುವು ಕಂಡ ಉಮೇಶ ಮೇಟಿಗೆ ಅನುಕಂಪದ ಅಲೆ, ಜೊತೆಗೆ ಆಡಳಿತಾರೂಢ ಸರ್ಕಾರ ಜೊತೆಯಾಗಿದ್ದರಿಂದ ಈ ಗೆಲುವು ಸಾಧ್ಯವಾಗಿದೆ.&lt;/p&gt;&lt;h3&gt;&lt;strong&gt;ಧನ್ಯವಾದ ಸಲ್ಲಿಸಿದ ಉಮೇಶ್ ಮೇಟಿ&lt;/strong&gt;&lt;/h3&gt;&lt;p&gt;ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ. ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ ಎಂದು ಉಮೇಶ್ ಮೇಟಿ ಹೇಳುತ್ತಾರೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf"/>
        </item>
        <item>
            <title><![CDATA[ಬಾಗಲಕೋಟೆ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಯಾರಿಗೆ ವಿಜಯ ಮಾಲೆ?]]></title>
            <link>https://kannada.asianetnews.com/politics/karnataka-by-election-results-2026-bagalkote-who-will-win-between-congress-and-bjp-rav/articleshow-t6o1t41</link>
            <guid isPermaLink="true">https://kannada.asianetnews.com/politics/karnataka-by-election-results-2026-bagalkote-who-will-win-between-congress-and-bjp-rav/articleshow-t6o1t41</guid>
            <pubDate>Mon, 04 May 2026 07:19:36 +0530</pubDate>
            <description><![CDATA[ಎಚ್.ವೈ. ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆದಿದ್ದು, ಎರಡೂ ಪಕ್ಷಗಳು ಗೆಲುವಿಗಾಗಿ ತಮ್ಮದೇ ಆದ ತಂತ್ರಗಳನ್ನು ನೆಚ್ಚಿಕೊಂಡಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqrakwvjtp7jktj845v314ww,imgname-----------------------2026-05-04t071536.031-1777859162994.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಈಶ್ವರ ಶೆಟ್ಟರ&lt;/strong&gt;&lt;/p&gt;&lt;p&gt;&lt;strong&gt;ಬಾಗಲಕೋಟೆ (ಮೇ.4)&lt;/strong&gt;: 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿದ್ದ ಎಚ್.ವೈ. ಮೇಟಿಯವರ ಅಕಾಲಿಕ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆದು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್&zwnj; ಹಾಗೂ ಪ್ರತಿಪಕ್ಷ ಬಿಜೆಪಿ ಮಧ್ಯೆ ತೀವ್ರ ತುರುಸಿನ ಪೈಪೋಟಿಗೆ ಸಾಕ್ಷಿಯಾದ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದ್ದು, ಎರಡೂ ಪಕ್ಷಗಳ ಅಭ್ಯರ್ಥಿಗಳ ಎದೆಬಡಿತ ಹೆಚ್ಚಿಸಿದೆ.ಆಡಳಿತಾರೂಢ ಕಾಂಗ್ರೆಸ್ ಗೆ ಉಪಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದ್ದರೆ, ಕಳೆದ ಬಾರಿ ತೀವ್ರ ಪೈಪೋಟಿ ನೀಡಿ ಸೋಲು ಅನುಭವಿಸಿದ ಬಿಜೆಪಿಗೆ ಸರ್ಕಾರದ ಆಡಳಿತ ವಿರೋಧಿ ಅಲೆ ಬಳೆಸಿಕೊಂಡು ಮತ್ತೊಮ್ಮೆ ಮತಕ್ಷೇತ್ರ ಪಡೆದು ಮುಂಬರುವ ಚುನಾವಣೆಗೆ ಸಿದ್ಧಗೊಳ್ಳಲು ಸಜ್ಜಾಗಿದೆ.&lt;/p&gt;&lt;h2&gt;ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಹಣಾಹಣಿ:&lt;/h2&gt;&lt;p&gt;ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿ ಗೆಲುವಿಗೆ ಅನುಕಂಪ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನೆಚ್ಚಿಕೊಂಡಿದ್ದರೆ ಬಿಜೆಪಿ ತನ್ನ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯ ಹಾಗೂ ಆಡಳಿತ ವಿರೋಧಿ ಅಲೆ ಅವಲಂಬಿಸಿದೆ.&lt;/p&gt;&lt;p&gt;ಕ್ಷೇತ್ರದಲ್ಲಿ ಮತದಾರರನ್ನು ಒಲಿಸಿಕೊಳ್ಳಲು ಉಭಯ ಪಕ್ಷಗಳು ಆಯಾ ಜಾತಿ, ಜನಾಂಗದ ನಾಯಕರು, ಸಚಿವರನ್ನು ಬಳಸಿಕೊಂಡು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಇನ್ನಿಲ್ಲದ ಕಸರತ್ತನ್ನು ನಡೆಸಿವೆ.&lt;/p&gt;&lt;h3&gt;ಫಲಿತಾಂಶ ಏನಾಗಬಹುದು ?&lt;/h3&gt;&lt;p&gt;ಚುನಾವಣೆಯ ನಂತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಗೆಲವಿನ ಲೆಕ್ಕಾಚಾರಗಳು ನಡೆದಿವೆಯಾದರೂ ಸಹ ಕೆಲವು ಸಮೀಕ್ಷೆಗಳ ವರದಿಗಳು ಸಹ ಉಭಯ ಅಭ್ಯರ್ಥಿಗಳ ನಿದ್ದೆ ಕೆಡಿಸಿವೆ ಅಂದರೆ ತಪ್ಪಾಗಲಾರದು.&lt;/p&gt;&lt;p&gt;ಮತಕ್ಷೇತ್ರದಲ್ಲಿನ ಮತದಾರರ ನಾಡಿಮಿಡಿತ ಅರ್ಥವಾಗದಿದ್ದರೂ ಸಹ ಮೇಲ್ನೋಟಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಸಮ ಬಲದ ಹೋರಾಟ ಕಾಣುತ್ತಿದೆ. ನಗರ ಪ್ರದೇಶದಲ್ಲಿ ಬಿಜೆಪಿ ಮುಂದಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ ಕಂಡುಬರುತ್ತಿದೆ.&lt;/p&gt;&lt;p&gt;ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಾರಣಕ್ಕೆ ಮತದಾರರು ಅದರಲ್ಲೂ ಜಾತಿಗಳ ಒಗ್ಗಟ್ಟು ಸಹ ಕಾಣತೊಡಗಿದೆ. ಲಿಂಗಾಯತ ಸಮುದಾಯದ ಮತಗಳ ವಿಭಜನೆಯಾಗದೆ ಬಿಜೆಪಿಯ ಪಾರಂಪರಿಕ ಮತಗಳ ಕ್ರೋಡೀಕರಣ ಮತ್ತು ಕಳೆದ ಬಾರಿ ಕಳೆದುಕೊಂಡ ಮತಗಳನ್ನು ಮರಳಿ ಪಡೆದು ಇತರ ಜಾತಿಗಳ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ ಬಿಜೆಪಿ ಮತ್ತೆ ಕ್ಷೇತ್ರದಲ್ಲಿ ಕಮಲ ತೆಕ್ಕೆಗೆ ಪಡೆದುಕೊಳ್ಳಬಹುದು.&lt;/p&gt;&lt;p&gt;ಕಾಂಗ್ರಸ್ ಪಕ್ಷ ಅನುಕಂಪದ ಮತಗಳು, ಕ್ಷೇತ್ರದಲ್ಲಿ ಹೆಚ್ಚಾಗಿರುವ ಹಾಲುಮತ, ಅಲ್ಪಸಂಖ್ಯಾತ ಮತಗಳ ಜೊತೆಗೆ ದಲಿತ ಸಮುದಾಯದ ಮತಗಳು ಬಂದರೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಕೈಹಿಡಿದರೆ ಗೆಲುವು ಕಷ್ಟವಾಗಲಾರದು ಎಂಬ ವಿಶ್ಲೇಷಣೆಗಳು ನಡೆದಿವೆ.&lt;/p&gt;&lt;p&gt;ಉಭಯ ಪಕ್ಷಗಳಿಗೂ ಪ್ರತಿಷ್ಠೆಯ ಕಣ:ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ದಿನಗಳ ಪ್ರವಾಸ ಕೈಗೊಂಡು ಸರ್ಕಾರದ ಸಾಧನೆ ಹಾಗೂ ಅನುಕಂಪದ ಅಲೆಗೆ ಜೋತು ಬಿದ್ದು, ಕಾಂಗ್ರೆಸ್ ಗೆಲುವಿಗೆ ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ಅವರಿಗೆ ಜೊತೆಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ ಹಾಗೂ ಸಚಿವ ಸತೀಶ ಜಾರಕಿಹೋಳಿ ಅವರು ಕ್ಷೇತ್ರದಲ್ಲಿ ಬೀಡು ಬಿಟ್ಟು ಚುನಾವಣೆ ತಂತ್ರ ರೂಪಿಸಿದ್ದರು.&lt;/p&gt;&lt;p&gt;ಬಿಜೆಪಿಯೂ ಸಹ ಗೆಲುವಿಗೆ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಬೀಡು ಬಿಟ್ಟು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರಚಾರದ ಜೊತೆಗೆ ಬಿಜೆಪಿಯಲ್ಲಿನ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಚುನಾವಣೆ ಮಾಡಿದರು. ಜೊತೆಗೆ ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ ಅವರನ್ನು ಕರೆತಂದು ಪ್ರಚಾರ ಮಾಡಿಸಿ ಹಿಂದೂ ಮತಗಳ ಕ್ರೋಡೀಕರಣಕ್ಕೆ ಮುಂದಾಗಿದ್ದರು. ಸೋಮವಾರ ಎಲ್ಲ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಲಿದೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-by-election-results-2026-bagalkote-who-will-win-between-congress-and-bjp-rav/articleshow-t6o1t41"/>
        </item>
        <item>
            <title><![CDATA[ಮಳೆಗಾಗಿ ಗೊಂಬೆಗಳ ಅದ್ಧೂರಿ ಮದುವೆ; ಅರಿಶಿಣ ಕಾರ್ಯ, ಸುರಗಿ ಸುತ್ತು ಸೇರಿದಂತೆ ಎಲ್ಲವೂ ಇತ್ತು]]></title>
            <link>https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51</link>
            <guid isPermaLink="true">https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51</guid>
            <pubDate>Sat, 16 May 2026 07:29:48 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ವರ್ಚಗಲ್ ಗ್ರಾಮದಲ್ಲಿ ಮಳೆ ಕೊರತೆ ನೀಗಿಸಲು, ವರುಣ ದೇವನ ಕೃಪೆ ಕೋರಿ ಗೊಂಬೆಗಳ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು. ಹಿರಿಯರು ಹಾಕಿಕೊಟ್ಟ ಈ ಸಂಪ್ರದಾಯದಂತೆ, ಗ್ರಾಮಸ್ಥರೆಲ್ಲರೂ ಸೇರಿ ಮದುವೆಯ ಎಲ್ಲಾ ಶಾಸ್ತ್ರಗಳನ್ನು ಪಾಲಿಸಿ, ಈ ವಿಶಿಷ್ಟ ವಿವಾಹವನ್ನು ನಡೆಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01krq81bk3s7t5567943qta212,imgname-wedding-of-dolls-for-rain-1778896645731.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಲೋಕಾಪುರ ಗ್ರಾಮದ ಮಹಿಳೆಯರು, ಪುರುಷರು, ಯುವಕ, ಯುವತಿಯರು ಮುದುವೆ ಗಡಿಬಿಡಿಯಲ್ಲಿದ್ದರು. ಹಾಲಗಂಬ ನೆಡುವ, ಒಳಕಲ್ಲು ಪೂಜೆ, ಬಳೆ ಉಡಿಸುವುದು, ಬೀಗರನ್ನು ಬರಮಾಡಿಕೊಳ್ಳಲು ಎದುರು ಭೇಟಿ, ಅರಿಶಿಣ ಕಾರ್ಯ, ಸುರಗಿ ಸುತ್ತುವುದು, ಬಳಿಕ ಮಾಂಗಲ್ಯ ತಂತು ನಾನೇನಾ ಮಂತ್ರ ಮೊಳಗಿ ಗ್ರಾಮಸ್ಥರೆಲ್ಲ ಅಕ್ಷತೆ ಹಾಕಿ ಹರಿಸಿದರು.&lt;/p&gt;&lt;h2&gt;&lt;strong&gt;ಗೊಂಬೆಗಳ ಮದುವೆ&lt;/strong&gt;&lt;/h2&gt;&lt;p&gt;ಹೌದು, ಈ ಎಲ್ಲ ಮದುವೆ ಸಂಪ್ರದಾಯ ನೆರವೇರಿದ್ದು ಲೋಕಾಪುರ ಸಮೀಪದ ವರ್ಚಗಲ್ ಗ್ರಾಮದಲ್ಲಿ. ಹಾಗಂತ ಇದು ಯಾವುದೋ ಜೋಡಿಗಳ ಮದುವೆ ಆಗಿರಲಿಲ್ಲ. ವರುಣನ ಕೃಪೆಗಾಗಿ ಪ್ರಾರ್ಥಿಸಿ ಶುಕ್ರವಾರ ವರ್ಚಗಲ್&zwnj; ಗ್ರಾಮದಲ್ಲಿ ನಡೆದ ಗೊಂಬೆಗಳ ಮದುವೆ. ಮಳೆ ಕೊರೆತೆಯಾದರೆ ಗುರ್ಜಿ, ಕತ್ತೆಗಳ, ಕಪ್ಪೆಗಳ ಮದುವೆ ಮಾಡುವ ಮೂಲಕ ಜನತೆ ವರುಣನಲ್ಲಿ ಬೇಡಿಕೊಳ್ಳುವ ಸಂಪ್ರದಾಯ ಈಗಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತದೆ. ಅದರಲ್ಲಿ ಗೊಂಬೆಗಳ ಮದುವೆಯೂ ಒಂದು.&lt;/p&gt;&lt;p&gt;ಓಣಿಯ ಹಿರಿಯರೆಲ್ಲ ಸೇರಿ ಗೊಂಬೆಗಳಿಗೆ ಅರಿಷಿಣ ಹಾಗೂ ಅರಿಷಿಣ ನೀರು ಹಾಕಿದರು. ಗೊಂಬೆಗಳು ಸರಿಯಾಗಿ ಕುಳಿತುಕೊಳ್ಳವುದಿಲ್ಲ ಎನ್ನುವ ಕಾರಣಕ್ಕಾಗಿ ಚಿಕ್ಕ ಮಕ್ಕಳ ಕೈಯಲ್ಲಿ ಈ ಗೊಂಬೆ ಕೊಟ್ಟು ಅವರ ಮೂಲಕವೇ ಗೊಂಬೆಗಳ ಮದುವೆ ಮಾಡಿದರು.&lt;/p&gt;&lt;h3&gt;&lt;strong&gt;ಗ್ರಾಮಸ್ಥರ ನಂಬಿಕೆ&lt;/strong&gt;&lt;/h3&gt;&lt;p&gt;ಮಳೆ ಕೊರತೆ ಎದುರಾದ ಸಂದರ್ಭದಲ್ಲಿ ನಮ್ಮ ಹಿರಿಯರು ಗೊಂಬೆಗಳ ಮದುವೆ ಮಾಡುತ್ತಿದ್ದರು. ಇದು ದೇವರಿಗೆ ಮನವರಿಕೆಯಾಗಿ, ರೈತರ ನೆರವಿಗೆ ಧಾವಿಸುತ್ತಿದ್ದ, ಅದಕ್ಕಾಗಿ ನಾವೂ ಈ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದೇವೆ. ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಸಾಗುತ್ತಿದ್ದೇವೆ ಎಂಬುದು ಗ್ರಾಮಸ್ಥರ ಅಭಿಪ್ರಾಯ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 4.50 ಲಕ್ಷದ ಸಾಲಕ್ಕೆ 6.14 ಎಕರೆ ಜಮೀನು ಹರಾಜು ಹಾಕಿದ ಕರ್ಣಾಟಕ ಬ್ಯಾಂಕ್? ರೈತ ಸಂಘದ ಆರೋಪ&lt;/strong&gt;&lt;/p&gt;&lt;p&gt;ಮದುವೆ ಗ್ರಾಮದ ಹಿರಿಯರಾದ ಈರಣ್ಣ ಬಲ್ಕಿ, ಛಾಯಪ್ಪಗೌಡ ಪಾಟೀಲ, ಬಸು ಹೊಸಳ್ಳಿ, ಶಿವಪ್ಪ ಯಾದವಾಡ, ಸಿದ್ದು ಹೊಸಮನಿ, ಭಗವಂತಪ್ಪ ತುಳಸಿಗೇರಿ,ಮಂಜು ಬಲ್ಕಿ, ಹೊಳಬಸು ವಸ್ತ್ರದ, ಬಸಲಿಂಗಪ್ಪ ಕಟ್ಟಿ, ಪುಂಡಲೀಕ ಮುತ್ತಣ್ಣವರ, ಪ್ರಕಾಶ ತಳವಾರ, ಭಾಸ್ಕರ ಚಿಕ್ಕೂರ, ಕಿಷ್ಟಪ್ಪ ಗುಡದನ್ನವರ, ಚನ್ನಬಸಪ್ಪ ಹೊಸಳ್ಳಿ, ತಾಯಂದಿರು, ಮಕ್ಕಳು ಯುವಕ ಮಿತ್ರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಿಂಬದಿ ಚಕ್ರ ತುಂಡಾಗಿ ಪಲ್ಟಿ ಹೊಡೆದ ಮಾವು ತುಂಬಿದ ಲಾರಿ; ರಸ್ತೆಯಲ್ಲಿ ಚೆಲ್ಲಿದ ಮಾವಿನ ಹಣ್ಣು!&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51"/>
        </item>
        <item>
            <title><![CDATA[ಕಾಂಗ್ರೆಸ್‌ಗೆ ಬಿಗ್ ಶಾಕ್ ನೀಡಿದ ಅಲ್ಪಸಂಖ್ಯಾತ ಮುಖಂಡರು; ಅಧಿಕೃತವಾಗಿ BJP ಸೇರ್ಪಡೆ]]></title>
            <link>https://kannada.asianetnews.com/gallery/karnataka-districts/terdal-assembly-constituency-minorites-leader-joins-bjp-party-big-shock-to-congress-mrq-xczit42</link>
            <guid isPermaLink="true">https://kannada.asianetnews.com/gallery/karnataka-districts/terdal-assembly-constituency-minorites-leader-joins-bjp-party-big-shock-to-congress-mrq-xczit42</guid>
            <pubDate>Sun, 03 May 2026 17:55:54 +0530</pubDate>
            <description><![CDATA[&lt;p&gt;ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ, ಶಾಸಕ ಸಿದ್ದು ಸವದಿ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಕಾಂಗ್ರೆಸ್ ದುರಾಡಳಿತ, ಬೆಲೆ ಏರಿಕೆ ಮತ್ತು ಅಲ್ಪಸಂಖ್ಯಾತರಿಗೆ ಸಹಕಾರವಿಲ್ಲದಿರುವುದೇ ಪಕ್ಷ ತೊರೆಯಲು ಕಾರಣವೆಂದು ಅವರು ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqpw0ck864xv20dw72g8n9cc,imgname-congress-bjp--5--1777810289256.jpg" type="image/jpeg" height="390" width="690"/>
            <content:encoded><![CDATA[&lt;p&gt;ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ, ಶಾಸಕ ಸಿದ್ದು ಸವದಿ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಕಾಂಗ್ರೆಸ್ ದುರಾಡಳಿತ, ಬೆಲೆ ಏರಿಕೆ ಮತ್ತು ಅಲ್ಪಸಂಖ್ಯಾತರಿಗೆ ಸಹಕಾರವಿಲ್ಲದಿರುವುದೇ ಪಕ್ಷ ತೊರೆಯಲು ಕಾರಣವೆಂದು ಅವರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ತೇರದಾಳ ವಿಧಾನಸಭಾ ಕ್ಷೇತ್ರದ ಕುಲಹಳ್ಳಿ ಗ್ರಾಮದಲ್ಲಿ ಶಾಸಕ ಸಿದ್ದು ಸವದಿ ಉಪಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಅಲ್ಪಸಂಖ್ಯಾತ ಸಮುದಾಯದ 50ಕ್ಕೂ ಅಧಿಕ ಕಾರ್ಯಕರ್ತರು ಸೇರಿದಂತೆ ಅನೇಕ ಸಂಘಟನೆ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.&lt;/p&gt;&lt;img&gt;&lt;p&gt;ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಬೇಸತ್ತು ಹಾಗೂ ಗ್ಯಾರಂಟಿಗಳ ಗೋಜಿನಲ್ಲಿ ದೈನಂದಿನ ಬೆಲೆ ಗಗನಕ್ಕೇರುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವುದಲ್ಲದೇ ತೇರದಾಳ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸಮರ್ಪಕ ಸಹಕಾರವಿಲ್ಲದ ಕಾರಣ ಬಿಜೆಪಿಗೆ ಸೇರ್ಪಡೆಯಾಗುವುದು ಅನಿವಾರ್ಯವಾಯಿತು ಎಂದು ಪಿಕೆಪಿಎಸ್ ಅಧ್ಯಕ್ಷ ನಸರುದ್ದೀನ್ ಸಂತಿ ಹೇಳಿದರು.&lt;/p&gt;&lt;img&gt;&lt;p&gt;ಶಾಸಕ ಸಿದ್ದು ಸವದಿ ಮಾತನಾಡಿ, ಈಗಿನ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಬಡವರಿಗಾಗಿ ಒಂದು ಮನೆ ಕೂಡ ಮಂಜೂರಾಗಿಲ್ಲ. ಆಸ್ತಿ ತೆರಿಗೆ ಹೆಚ್ಚಳವಾಗಿದೆ. ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಪಕ್ಷ ಸಂಘಟನೆ ಬಲಪಡಿಸುವ ದಿಸೆಯಲ್ಲಿ ಈ ಸೇರ್ಪಡೆ ಮಹತ್ವದ್ದಾಗಿದೆ ಎಂದರು.&lt;/p&gt;&lt;img&gt;&lt;p&gt;ಕುಲಹಳ್ಳಿ ಗ್ರಾಮದ ನಸರುದ್ದೀನ್ ಸಂತಿ, ಹಣಮಂತ ಕಂಕಣವಾಡಿ, ಬಸಪ್ಪ ಬಿಳ್ಳೂರ ನೇತೃತ್ವದಲ್ಲಿ ಹಣಮಂತ ಜಕಾತಿ, ಮಹ್ಮದ್ ಕಾಲಿಖಾನ್, ಮೈಬೂಬ್&zwnj; ಸಂತಿ, ಹಾಜಿಸಾಬ್&zwnj; ಹಳಿಂಗಳಿ, ಗುಲಾಬ್&zwnj; ಅಪರಾಜ, ಮಹಾದೇವ ಗಸ್ತಿ, ಆದಂ ಸಂತಿ, ಹುಮಾಯೂನ್ ಸಂತಿ, ಆಸೀಫ್ ಸಂತಿ, ಲಾಲಸಾಬ್&zwnj; ಸನದಿ, ಸಲೀಂ ಸಂತಿ, ಇಮಾಮ್&zwnj; ಸಂತಿ ಸೇರಿದಂತೆ ಅನೇಕರು ಬಿಜೆಪಿಗೆ ಸೇರ್ಪಡೆಗೊಂಡರು.&lt;/p&gt;&lt;img&gt;&lt;p&gt;ಪಕ್ಷದ ಮುಖಂಡರಾದ ಗಿರಮಲ್ಲಪ್ಪ ಕೆರೂರ, ಚಂದ್ರಯ್ಯ ಮಠಪತಿ, ಹೊಳಬಸಪ್ಪ ಜಂಬಗಿ, ಶಿವಪ್ಪ ಬಾಗಲಕೋಟ, ಹಣಮಂತ ತೇಲಿ, ಕಲ್ಲಪ್ಪ ಕಂಕಣವಾಡಿ, ಚಿನ್ನಪ್ಪ ಕಂಕಣವಾಡಿ, ವಿಠ್ಠಲ ಅಡಗಲಿ, ಚನ್ನಪ್ಪ ನಿಂಬರಗಿ, ಮಹಾದೇವ ಕಾತ್ರಾಳ, ಸಿದ್ದಪ್ಪ ನಿಂಬರಗಿ, ಶಿವಲಿಂಗಪ್ಪ ಪಾಯಗೊಂಡ, ಮುತ್ತಪಪ್ ಕಂಕಣವಾಡಿ, ಭಾರತಿ ಗಸ್ತಿ, ಶ್ರೀಶೈಲ ಮಗದುಮ್, ಮುತ್ತಪ್ಪ ಸವದಿ, ಬಸಯ್ಯ ಪೂಜಾರಿ, ಶಿವಲಿಂಗ ಕಾಲತಿಪ್ಪಿ, ಚಿದಾನಂದ ಕಾಂಬಳೆ, ಲಲಿತಾ ಮೊಳೆ ಉಪಸ್ಥಿತರಿದ್ದರು.&lt;/p&gt;&lt;img&gt;&lt;p&gt;ಕುಲಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ನಸರುದ್ದೀನ್ ಸಂತಿ ಹಾಗೂ ಉಪಾಧ್ಯಕ್ಷರಾದ ಹಣುಮಂತ ಜಕಾತಿ ಅವರು ಹಾಗೂ ಅವರ ಬೆಂಬಲಿಗರೊಂದಿಗೆ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು ಎಂದು ಶಾಸಕ ಸಿದ್ದು ಸವದಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/terdal-assembly-constituency-minorites-leader-joins-bjp-party-big-shock-to-congress-mrq-xczit42"/>
        </item>
        <item>
            <title><![CDATA[ಬಾಗಲಕೋಟೆ ಉಪಚುನಾವಣೆ ಮತ ಎಣಿಕೆ: ಬಿಗಿ ಭದ್ರತೆಯೊಂದಿಗೆ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಅಧಿಕಾರಿಗಳು]]></title>
            <link>https://kannada.asianetnews.com/politics/bagalkot-by-election-vote-counting-today-tight-security-key-battle-between-bjp-and-congress-gdp/articleshow-xnlvlp0</link>
            <guid isPermaLink="true">https://kannada.asianetnews.com/politics/bagalkot-by-election-vote-counting-today-tight-security-key-battle-between-bjp-and-congress-gdp/articleshow-xnlvlp0</guid>
            <pubDate>Mon, 04 May 2026 07:49:48 +0530</pubDate>
            <description><![CDATA[ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವಿನ ನೇರ ಹಣಾಹಣಿಯ ಫಲಿತಾಂಶಕ್ಕಾಗಿ ತೀವ್ರ ಕುತೂಹಲ ಕೆರಳಿದೆ. ನವನಗರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬಿಗಿ ಭದ್ರತೆಯೊಂದಿಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqrce6a34asjxw0w2b30n3ey,imgname-bagalkot-by-election-1777861073218.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಇಂದು (ಮೇ 4) ಮತ ಎಣಿಕೆ ಕಾರ್ಯ ನಡೆಯಲಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವನಗರದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ.&lt;/p&gt;&lt;p&gt;ಮತ ಎಣಿಕೆ ಪ್ರಾರಂಭಕ್ಕೂ ಮುನ್ನವೇ ಅಧಿಕಾರಿಗಳು ಭದ್ರತಾ ಕ್ರಮಗಳ ನಡುವೆಯೇ ಸ್ಟ್ರಾಂಗ್ ರೂಮ್&zwnj;ಗಳನ್ನು ತೆರೆಯುವ ಕಾರ್ಯವನ್ನು ಕೈಗೊಂಡರು. ಇವಿಎಮ್&zwnj;ಗಳು ಹಾಗೂ ಅಂಚೆ ಮತಪತ್ರಗಳನ್ನು ಸಂಗ್ರಹಿಸಲಾಗಿದ್ದ ಒಟ್ಟು ಎರಡು ಸ್ಟ್ರಾಂಗ್ ರೂಮ್&zwnj;ಗಳನ್ನು ಜನರಲ್ ಅಬ್ಸರ್ವರ್ ಪಾರುಲ್, ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ್ ತೇಲಿ, ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಮತ್ತು ಚುನಾವಣಾಧಿಕಾರಿ ಸಂತೋಷ ಜಗಲಾಸರ್ ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಅಭ್ಯರ್ಥಿಗಳ ಏಜೆಂಟ್&zwnj;ಗಳೂ ಈ ವೇಳೆ ಹಾಜರಿದ್ದರು. ಸ್ಟ್ರಾಂಗ್ ರೂಮ್&zwnj;ಗಳನ್ನು ತೆರೆಯುವ ವೇಳೆ ಸಾಲು ಸಾಲಾಗಿ ಇಡಲಾಗಿದ್ದ ಇವಿಎಮ್ ಯಂತ್ರಗಳು ಹಾಗೂ ಅಂಚೆ ಮತಪತ್ರಗಳ ವ್ಯವಸ್ಥೆ ಪರಿಶೀಲಿಸಲಾಯಿತು.&lt;/p&gt;&lt;p&gt;ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಡುವೆ ನೇರ ಪೈಪೋಟಿ ಕಂಡುಬಂದಿದ್ದು, ಫಲಿತಾಂಶ ಯಾವತ್ತಿಗೆ ತಿರುಗುತ್ತದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.&lt;/p&gt;&lt;h2&gt;ಮತದಾರರ ಮಾಹಿತಿ ಮತ್ತು ಮತದಾನ ಶೇಕಡಾವಾರು&lt;/h2&gt;&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರು ಇದ್ದು, ಇವರಲ್ಲಿ 1,78,273 ಮಂದಿ ಮತ ಚಲಾಯಿಸಿದ್ದಾರೆ. ಇದರಿಂದ ಒಟ್ಟು ಶೇ. 68.62ರಷ್ಟು ಮತದಾನ ದಾಖಲಾಗಿದೆ.&lt;/p&gt;&lt;p&gt;ಪುರುಷ ಮತದಾರರು: 1,26,999 ಮತದಾನ ಮಾಡಿದವರು: 88,241 (ಶೇ. 69.48) ಮಹಿಳಾ ಮತದಾರರು: 1,32,775 ಮತದಾನ ಮಾಡಿದವರು: 90,024 (ಶೇ. 67.80) ಇತರೆ ಮತದಾರರು: 08 &amp;nbsp;ನಗರ ಪ್ರದೇಶದಲ್ಲಿ ಶೇ. 61.25ರಷ್ಟು ಮತದಾನವಾಗಿದ್ದರೆ, ಗ್ರಾಮೀಣ ಭಾಗದಲ್ಲಿ ಶೇ. 74.61ರಷ್ಟು ಮತದಾನವಾಗಿರುವುದು ಗಮನಾರ್ಹವಾಗಿದೆ.&lt;/p&gt;&lt;h2&gt;ಮತ ಎಣಿಕೆ ವ್ಯವಸ್ಥೆ&lt;/h2&gt;&lt;p&gt;ಒಟ್ಟು 322 ಮತಗಟ್ಟೆಗಳ ಮತಗಳನ್ನು ಎಣಿಸಲಾಗುತ್ತಿದ್ದು, 14 ಟೇಬಲ್&zwnj;ಗಳ ಮೂಲಕ 23 ಸುತ್ತುಗಳಲ್ಲಿ ಇವಿಎಮ್ ಮತ ಎಣಿಕೆ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆಗೆ ಒಂದು ಟೇಬಲ್ ಹಾಗೂ ಇಟಿಪಿಬಿಎಸ್ (ಸೇವಾ ಮತದಾರರ) ಸ್ಕ್ಯಾನಿಂಗ್&zwnj;ಗಾಗಿ ಒಂದು ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಇವಿಎಮ್ ಮತ ಎಣಿಕೆ: ರೂಂ ನಂ. 4 (ನೆಲಮಹಡಿ) ಅಂಚೆ ಮತ ಎಣಿಕೆ: ರೂಂ ನಂ. 9 ಇಟಿಪಿಬಿಎಸ್ ಸ್ಕ್ಯಾನಿಂಗ್: ರೂಂ ನಂ. 9&lt;/p&gt;&lt;p&gt;ಪ್ರತಿ ಟೇಬಲ್&zwnj;ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಲಾಗಿದೆ. ಒಟ್ಟಾರೆ 63 ಸಿಬ್ಬಂದಿಯನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ.&lt;/p&gt;&lt;p&gt;ಅಂಚೆ ಮತಗಳು 270 ಇದ್ದು, ಇಟಿಪಿಬಿಎಸ್ (ಸೇವಾ ಮತದಾರರು) 120 ಮತಗಳು ದಾಖಲಾಗಿವೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಮನೆಯಲ್ಲೇ ಮತ ಚಲಾಯಿಸಿದ ಪಿಡಬ್ಲ್ಯೂಡಿ ಮತಗಳು 273 ಇವೆ.&lt;/p&gt;&lt;h2&gt;ಭದ್ರತಾ ಕ್ರಮಗಳು ಕಠಿಣ&lt;/h2&gt;&lt;p&gt;ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 900ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇದರಲ್ಲಿ:&lt;/p&gt;&lt;p&gt;1 ಎಸ್&zwnj;ಪಿ, 1 ಎಎಸ್ಪಿ 2 ಡಿವೈಎಸ್&zwnj;ಪಿ 17 ಸಿಪಿಐ, 60 ಪಿಎಸ್&zwnj;ಐ ಪೊಲೀಸ್ ಸಿಬ್ಬಂದಿ ಸೇರಿದ್ದಾರೆ&lt;/p&gt;&lt;p&gt;ಇದಲ್ಲದೆ 3 ಕೆಎಸ್ಆರ್&zwnj;ಪಿ ತುಕುಡಿಗಳು, 15 ಡಿಎಆರ್ ಹಾಗೂ 32 ಸಿಎಪಿಎಫ್ ತಂಡಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.&lt;/p&gt;&lt;h2&gt;ನಿಷೇಧಾಜ್ಞೆ ಜಾರಿ&lt;/h2&gt;&lt;p&gt;ಮತ ಎಣಿಕೆ ಹಿನ್ನೆಲೆ, ಮೇ 4ರ ಬೆಳಿಗ್ಗೆ 6 ಗಂಟೆಯಿಂದ ಮೇ 5ರ ಬೆಳಿಗ್ಗೆ 6 ಗಂಟೆಯವರೆಗೆ ಬಿಎನ್&zwnj;ಎಸ್ 163ರಡಿ ನಿಷೇಧಾಜ್ಞೆ ಜಾರಿಯಲ್ಲಿದೆ. ಜೊತೆಗೆ ಮೇ 4ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ಮತ್ತು ವಿತರಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಬಾಗಲಕೋಟೆ ಕ್ಷೇತ್ರ ಹಾಗೂ ಅದರ 10 ಕಿಮೀ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.&lt;/p&gt;&lt;p&gt;ಬೆಳಿಗ್ಗೆ 7 ಗಂಟೆಗೆ ಅಭ್ಯರ್ಥಿಗಳು, ಅವರ ಏಜೆಂಟ್&zwnj;ಗಳು ಹಾಗೂ ಚುನಾವಣಾ ಅಧಿಕಾರಿಗಳು ಹಾಜರಿದ್ದು, ಬಳಿಕ ಸ್ಟ್ರಾಂಗ್ ರೂಮ್ ತೆರೆಯುವ ಮೂಲಕ ಮತ ಎಣಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ಕಠಿಣ ಭದ್ರತೆಯ ನಡುವೆ ನಡೆಯುತ್ತಿರುವ ಈ ಮತ ಎಣಿಕೆ ಫಲಿತಾಂಶವು ಬಾಗಲಕೋಟೆ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದು, ಎಲ್ಲರ ದೃಷ್ಟಿ ಇದೀಗ ಫಲಿತಾಂಶದ ಮೇಲೆ ಕೇಂದ್ರೀಕೃತವಾಗಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/politics/bagalkot-by-election-vote-counting-today-tight-security-key-battle-between-bjp-and-congress-gdp/articleshow-xnlvlp0"/>
        </item>
        <item>
            <title><![CDATA[ಉತ್ತರ ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಹುಬ್ಬಳ್ಳಿ, ವಿಜಯಪುರ ಜನರಿಗೆ ಈ ರೈಲಿನ ಟಿಕೆಟ್ ದರ ಇಳಿಕೆ!]]></title>
            <link>https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</link>
            <guid isPermaLink="true">https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</guid>
            <pubDate>Mon, 11 May 2026 19:53:18 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krbp7dt0zx3643fjbw2gffha,imgname-hubballi-to-rishikesh-train-1778508871487.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ/ಧಾರವಾಡ: ಉತ್ತರ ಕರ್ನಾಟಕದ ಜಿಲ್ಲೆಗಳ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ನೈಋತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಈವರೆಗೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಪ್ರಮುಖ ರೈಲುಗಳನ್ನು ಇಂದಿನಿಂದ 'ನಿಯಮಿತ ಸೇವೆ'ಗಳನ್ನಾಗಿ (Regular Train Services) ಪರಿವರ್ತಿಸಲಾಗುತ್ತಿದೆ. ಈ ಮಹತ್ವದ ನಿರ್ಧಾರವು ಉತ್ತರ ಕರ್ನಾಟಕದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ಹೊಸ ವೇಗ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ ಮತ್ತು ವಿಜಯಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 56919/20 ಹಾಗೂ 66501/02 ರೈಲುಗಳು ಇನ್ನು ಮುಂದೆ ನಿಯಮಿತವಾಗಿ ಸಂಚರಿಸಲಿವೆ. ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹುಬ್ಬಳ್ಳಿ - ವಿಜಯಪುರ ನೂತನ ನಿಯಮಿತ ಮೆಮು (MEMU- Mainline Electric Multiple Unit) ರೈಲಿಗೆ (ರೈಲು ಸಂಖ್ಯೆ: 66501) ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.&amp;nbsp;&lt;/p&gt;&lt;p&gt;ಇದರಿಂದ ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮೆಮು ರೈಲು ಸಂಚಾರದಿಂದ ವೇಗದ ಮತ್ತು ಪರಿಸರ ಸ್ನೇಹಿ ಪ್ರಯಾಣ ಸಾಧ್ಯವಾಗಲಿದೆ.&lt;/p&gt;&lt;img&gt;&lt;p&gt;ಉತ್ತರ ಭಾರತಕ್ಕೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ರೈಲು ಸಂಖ್ಯೆ 17363/64 ಹುಬ್ಬಳ್ಳಿ - ಯೋಗ ನಗರಿ ಹೃಷಿಕೇಶ ವಾರಕ್ಕೊಮ್ಮೆ ಸಂಚರಿಸುವ ರೈಲನ್ನು ಈಗ ನಿಯಮಿತ ಸೇವೆಯನ್ನಾಗಿ ಮಾಡಲಾಗಿದೆ. ಇದರಿಂದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವವರಿಗೆ ವರ್ಷಪೂರ್ತಿ ಸುಲಭ ಪ್ರಯಾಣ ಒದಗಿಸಿದಂತಾಗುತ್ತದೆ.&lt;/p&gt;&lt;img&gt;&lt;p&gt;ಈ ರೈಲುಗಳ ಸೇವೆಯು ನಿಯಮಿತವಾಗಿ ಬದಲಾದ ಕಾರಣ ಪ್ರಯಾಣಿಕರಿಗೆ ಆರ್ಥಿಕವಾಗಿ ದೊಡ್ಡ ಲಾಭ ಸಿಗಲಿದೆ.&lt;/p&gt;&lt;p&gt;ಸಾಮಾನ್ಯ ದರ್ಜೆಯ ಪ್ರಯಾಣಿಕರಿಗೆ ಇನ್ನು ಮುಂದೆ ಸೂಪರ್&zwnj;ಫಾಸ್ಟ್ ಹೆಚ್ಚುವರಿ ಶುಲ್ಕವಿರುವುದಿಲ್ಲ.&lt;/p&gt;&lt;p&gt;ಮೀಸಲು ದರ್ಜೆಯ (Reserved Class) ಟಿಕೆಟ್ ದರದಲ್ಲಿ ಸುಮಾರು 30% ರಷ್ಟು ಕಡಿತವಾಗಲಿದ್ದು, ಪ್ರಯಾಣವು ಅತ್ಯಂತ ಕೈಗೆಟಕುವ ದರದಲ್ಲಿ ಜನಸಾಮಾನ್ಯರಿಗೆ ಸಿಗಲಿದೆ.&lt;/p&gt;&lt;img&gt;&lt;p&gt;ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆಯು ದೇಶದ ಅಭಿವೃದ್ಧಿಗೆ ವೇಗ ತುಂಬುತ್ತಿದೆ. ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಶ್ಲಾಘಿಸಿದರು.&amp;nbsp;&lt;/p&gt;&lt;p&gt;ಈ ಕಾರ್ಯಕ್ರಮದ ವೇಳೆ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದ (SWR) ಜನರಲ್ ಮ್ಯಾನೇಜರ್ ಪಿ. ಅನಂತು ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬದಲಾವಣೆಯು ಉತ್ತರ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ವಲಯಕ್ಕೆ ಹೊಸ ಶಕ್ತಿ ತುಂಬಲಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036"/>
        </item>
    </channel>
</rss>
