<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 17:12:00 +0530</lastBuildDate>
        <atom:link href="https://kannada.asianetnews.com/rss/bagalkot" rel="self" type="application/rss+xml"/>
        <item>
            <title><![CDATA[ಬಾಗಲಕೋಟೆ: ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ; ಚಾಲಕನ ಸಾಹಸದಿಂದ ತಪ್ಪಿದ ದುರಂತ]]></title>
            <link>https://kannada.asianetnews.com/state/bagalkot-sugarcane-tractor-catches-fire-driver-s-bravery-averts-major-tragedy/articleshow-zbs1fhc</link>
            <guid isPermaLink="true">https://kannada.asianetnews.com/state/bagalkot-sugarcane-tractor-catches-fire-driver-s-bravery-averts-major-tragedy/articleshow-zbs1fhc</guid>
            <pubDate>Fri, 09 Jan 2026 22:13:58 +0530</pubDate>
            <description><![CDATA[&lt;p&gt;ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್&zwnj;ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಚಾಲಕನು ಸಮಯಪ್ರಜ್ಞೆ ಮೆರೆದು, ಟ್ರ್ಯಾಕ್ಟರ್ ಅನ್ನು ದೂರ ಚಲಾಯಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ. ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲಾಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01keht6a3wtwkdjqb0s5fcw2vx,imgname-----------------------2026-01-09t221208.386-1767976937596.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಜ.9):&lt;/strong&gt; ಮೂರು ಟ್ರ್ಯಾಲಿಗಳಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿಉರಿದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಗೆ ಕಂಡು ಸ್ಥಳೀಯ ರೈತರು ಬೆಚ್ಚಿಬಿದ್ದರು.&lt;/p&gt;&lt;h2&gt;ಧಗಧಗಿಸುವ ಬೆಂಕಿಯ ನಡುವೆಯೇ ಚಾಲಕನ ಸಾಹಸ&lt;/h2&gt;&lt;p&gt;ತುಂಗಳ ಗ್ರಾಮದಿಂದ ಸಾವಳಗಿ ಮಾರ್ಗವಾಗಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್&zwnj;ನ ಮೂರು ಟ್ರ್ಯಾಲಿಗಳಿಗೂ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕಬ್ಬು ಒಣಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬೆಂಕಿ ಹೊತ್ತಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಎದೆಗುಂದದ ಚಾಲಕ, ಗ್ರಾಮದ ಜನವಸತಿ ಪ್ರದೇಶದಲ್ಲಿ ಅನಾಹುತ ತಪ್ಪಿಸಲು ಬೆಂಕಿ ಹತ್ತಿದ ಟ್ರ್ಯಾಕ್ಟರ್ ಅನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ.&lt;/p&gt;&lt;h3&gt;ವಾಟರ್ ಸರ್ವಿಸ್ ಸೆಂಟರ್ ಬಳಿ ನಿಲ್ಲಿಸಿ ಕಾರ್ಯಾಚರಣೆ&lt;/h3&gt;&lt;p&gt;ಗ್ರಾಮದ ರಸ್ತೆಗಳಲ್ಲಿ ಬೆಂಕಿ ಉಂಡೆಯಂತೆ ಸಾಗುತ್ತಿದ್ದ ಟ್ರ್ಯಾಕ್ಟರ್ ಕಂಡು ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಚಾಲಕ ಸಮಯಪ್ರಜ್ಞೆ ಮೆರೆದು ನೇರವಾಗಿ ಸಮೀಪದ 'ವಾಟರ್ ಸರ್ವಿಸ್ ಸೆಂಟರ್'ಗೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದಿದ್ದಾನೆ. ಕೂಡಲೇ ಅಲ್ಲಿದ್ದ ಹೈ-ಪ್ರೆಶರ್ ಪಂಪ್&zwnj;ಗಳ ಮೂಲಕ ನೀರಿನ ಸಿಂಪಡಣೆ ಮಾಡಿ ಬೆಂಕಿ ನಂದಿಸುವ ಪ್ರಾಥಮಿಕ ಪ್ರಯತ್ನ ಮಾಡಲಾಯಿತು.&lt;/p&gt;&lt;p&gt;&lt;strong&gt;ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ&lt;/strong&gt;&lt;/p&gt;&lt;p&gt;ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಪೂರ್ಣವಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಕಾಲಿಕ ಸ್ಪಂದನೆಯಿಂದಾಗಿ ಕಬ್ಬು ಸುಟ್ಟು ಹೋಗಿದ್ದರೂ, ಟ್ರ್ಯಾಕ್ಟರ್ ಇಂಜಿನ್ ಹಾಗೂ ಹೆಚ್ಚಿನ ಆಸ್ತಿಪಾಸ್ತಿ ಹಾನಿಯಾಗುವುದು ತಪ್ಪಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿ&lt;/p&gt;]]></content:encoded>
            <category>bagalkot</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/bagalkot-sugarcane-tractor-catches-fire-driver-s-bravery-averts-major-tragedy/articleshow-zbs1fhc"/>
        </item>
        <item>
            <title><![CDATA[ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್‌ಗೆ ಡಿಮ್ಯಾಂಡ್]]></title>
            <link>https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f</link>
            <guid isPermaLink="true">https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f</guid>
            <pubDate>Sun, 24 May 2026 16:02:36 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕರ ಸಭೆಯಲ್ಲಿ, ರಾಜ್ಯಸಭಾ ಸಂಸದ ನಾರಾಯಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ರೈಲು ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಹೊಸ ವಂದೇ ಭಾರತ್, ಬಾಗಲಕೋಟೆ-ಕುಡಚಿ ಮಾರ್ಗ, ಮತ್ತು ವಿಜಯಪುರ-ತಿರುಪತಿ ರೈಲು ಸೇರಿದಂತೆ ಹಲವು ಯೋಜನೆಗಳ ಕುರಿತು ಚರ್ಚಿಸಲಾಗಿದ್ದು, ಈ ಯೋಜನೆಗಳು ಪ್ರಾದೇಶಿಕ ಸಂಪರ್ಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk9bp62qv9cthntcjy9jaten,imgname-chittur-railway-station-1773062002775.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಕುರಿತು ಮಹತ್ವದ ಸಭೆಯು ಹುಬ್ಬಳ್ಳಿಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕರೊಂದಿಗೆ ಶುಕ್ರವಾರ ನಡೆಯಿತು.&lt;/p&gt;&lt;p&gt;ಹುಬ್ಬಳ್ಳಿಯಲ್ಲಿ ಮಹಾ ವ್ಯವಸ್ಥಾಪಕ ಪಿ.ಅನಂತ್ ಅವರೊಂದಿಗೆ ಉತ್ತರ ಕರ್ನಾಟಕದ ರೈಲು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ ರೈಲು ಸೇವೆಗಳ ವಿಸ್ತರಣೆ ಕುರಿತು ಮಹತ್ವದ ಚರ್ಚೆ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯ ಇಂಜಿನಿಯರ್ ಹಾಗೂ ಹೆಚ್ಚುವರಿ ಮುಖ್ಯ ಎಂಜಿನಿಯರ್ ಉಪಸ್ಥಿತರಿದ್ದರು. ರಾಜ್ಯಸಭಾ ಸಂಸದರಾದ ನಾರಾಯಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಪ್ರಮುಖ ರೈಲು ಯೋಜನೆಗಳು ಮತ್ತು ಸಾರ್ವಜನಿಕ ಬೇಡಿಕೆಗಳಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಮಂಡಿಸಿದರು.&lt;/p&gt;&lt;h2&gt;ಹಲವು ರೈಲುಗಳ ವೆಚ್ಚ&lt;/h2&gt;&lt;p&gt;ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದು, ಗದಗ-ಮುಂಬೈ ನಡುವೆ ಬಾಗಲಕೋಟೆ-ಸೊಲ್ಲಾಪುರ ಮಾರ್ಗವಾಗಿ ಹೊಸ ವಂದೇ ಭಾರತ್ ಎಕ್ಸಪ್ರೆಸ್&zwnj; ಆರಂಭಿಸುವುದು, ವಿಜಯಪುರ-ತಿರುಪತಿ ನೇರ ರೈಲು ಸೇವೆ ಆರಂಭಿಸುವ ಕುರಿತು, ಗೋಲ್ ಗುಂಬಜ್ ಎಕ್ಸ್ಪ್ರೆಸ್ (16535/16536) ರೈಲಿನ ವೇಗ ಹೆಚ್ಚಿಸುವುದು, ಸವದತ್ತಿ ಮಾರ್ಗವಾಗಿ ಲೋಕಾಪುರ-ಧಾರವಾಡ ಹೊಸ ರೈಲು ಮಾರ್ಗ ನಿರ್ಮಾಣ, ಹುಬ್ಬಳ್ಳಿ-ಹಜ್ರತ್ ನಿಜಾಮುದ್ದೀನ್ ಎಕ್ಸಪ್ರೆಸ್&zwnj; (20647) ಸೇವೆಯನ್ನು ವಾರಕ್ಕೆ ಎರಡು ಬಾರಿ ವಿಸ್ತರಿಸುವುದು, ಬಸವ ಎಕ್ಸಪ್ರೆಸ್&zwnj; ರೈಲನ್ನು ಲೋಕಾಪುರವರೆಗೆ ವಿಸ್ತರಿಸುವುದು, ಬಾಗಲಕೋಟೆ ರೈಲು ನಿಲ್ದಾಣದ ಪ್ಲಾಟ್&zwnj; ಫಾರ್ಮ್&zwnj; ಸಂಖ್ಯೆ 2 ಮತ್ತು 3ರಲ್ಲಿ ಲಿಫ್ಟ್ ಅಳವಡಿಸುವ ಕುರಿತು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಅವರು ಮಾತನಾಡಿದರು.&lt;/p&gt;&lt;h2&gt;ಪ್ರಯಾಣಿಕರ ಸೌಲಭ್ಯ ವೃದ್ಧಿಗೆ ಮಹತ್ವದ ಪಾತ್ರ&lt;/h2&gt;&lt;p&gt;ಈ ಯೋಜನೆಗಳು ಉತ್ತರ ಕರ್ನಾಟಕದ ಪ್ರಾದೇಶಿಕ ಸಂಪರ್ಕ, ಆರ್ಥಿಕ ಬೆಳವಣಿಗೆ, ಕೈಗಾರಿಕೆ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಲಭ್ಯ ವೃದ್ಧಿಗೆ ಮಹತ್ವದ ಪಾತ್ರ ವಹಿಸಲಿವೆ ಎಂದು ತಿಳಿಸಿದರು. ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕ ಪಿ. ಅನಂತ್ ಅವರು ಮಂಡಿಸಲಾದ ಪ್ರಸ್ತಾವನೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f"/>
        </item>
        <item>
            <title><![CDATA[ದೇಶದ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ]]></title>
            <link>https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18</link>
            <guid isPermaLink="true">https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18</guid>
            <pubDate>Mon, 11 May 2026 00:25:35 +0530</pubDate>
            <description><![CDATA[&lt;p&gt;ಸಹಕಾರಿ ಚಳವಳಿ ದೇಶದಲ್ಲಿ ದೊಡ್ಡ ಸಾಧನೆ ಮಾಡಿದೆ. ಬಡವರು ಆರ್ಥಿಕ ಸಧೃಡತೆಗೆ ಸಹಕಾರಿ ಕ್ಷೇತ್ರ ಸಹಕಾರಿಯಾಗಿದೆ. ಸಾಲ ಕೊಡುವುದು ಸುಲಭ ಆದರೆ ಸಾಲ ವಸೂಲಿ ಮಾಡುವುದು ಬಹಳ ಕಷ್ಟದ ಕೆಲಸ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hdv9x0kz2vxq49c8xyxh51mj,imgname-screenshot-2023-10-28-185239.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಳೇದಗುಡ್ಡ (ಮೇ.11):&lt;/strong&gt; ಸಹಕಾರಿ ಚಳವಳಿ ದೇಶದಲ್ಲಿ ದೊಡ್ಡ ಸಾಧನೆ ಮಾಡಿದೆ. ಬಡವರು ಆರ್ಥಿಕ ಸಧೃಡತೆಗೆ ಸಹಕಾರಿ ಕ್ಷೇತ್ರ ಸಹಕಾರಿಯಾಗಿದೆ. ಸಾಲ ಕೊಡುವುದು ಸುಲಭ ಆದರೆ ಸಾಲ ವಸೂಲಿ ಮಾಡುವುದು ಬಹಳ ಕಷ್ಟದ ಕೆಲಸವಾಗಿದೆ. ಸಂಜಯ ಬರಗುಂಡಿಯವರು ಸಹಕಾರಿ ಬ್ಯಾಂಕ್&zwnj;ನ್ನು 25 ವರ್ಷಗಳ ಮುನ್ನಡೆಸಿಕೊಂಡು ಬಂದು ಇಂದು ಸ್ವಂತ ಕಟ್ಟಡ ನಿರ್ಮಿಸಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.&lt;/p&gt;&lt;p&gt;ಪಟ್ಟಣದಲ್ಲಿ ಬಸವೇಶ್ವರ ಪತ್ತಿನ ಸಹಕಾರಿ ಸಂಘದ (25ನೇ ವಾರ್ಷಿಕೋತ್ಸವ) ರಜತ ಮಹೋತ್ಸವದ ಸಂದರ್ಭದಲ್ಲಿ ಬ್ಯಾಂಕಿನಲ್ಲಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಈ ದೇಶದಲ್ಲಿ ಸಹಕಾರಿ ಚಳವಳಿ ನಡೆಯದಿದ್ದರೆ ಬಡವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬೆಳೆಯುವುದು ಕಷ್ಟವಾಗುತ್ತಿತ್ತು. ನೆಹರು, ವಲ್ಲಭಭಾಯಿ ಪಟೇಲರು ಸೇರಿ ಅನೇಕ ಮಹನೀಯರು ಸಹಕಾರಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಡೀ ದೇಶದಲ್ಲಿಯೇ ಹೆಚ್ಚಿನ ಸಾಲ ಸೌಲಭ್ಯ ಕೊಡುವ ಏಕೈಕ ಬ್ಯಾಂಕ್ ಬಾಗಲಕೋಟೆ, ವಿಜಯಪುರ ಡಿಸಿಸಿ ಬ್ಯಾಂಕ್ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಸಾಲಮನ್ನಾ&lt;/strong&gt;&lt;/h2&gt;&lt;p&gt;ಡಿಸಿಸಿ ಬ್ಯಾಂಕ್&zwnj; ರೈತರಿಗೆ ನೆರವಾಗಿದೆ. ಸಕಲಾಕ್ಕೆ ಸಾಲ ಸಿಗುತ್ತಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಲ ನೀಡಿದಂತೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಈ ರೀತಿಯಲ್ಲಿ ಇಲ್ಲ. ಅಲ್ಲದೆ ವಿಪತ್ತು, ಬರ ಪರಿಸ್ಥಿಗಳು ಎದುರಾದಾಗ ರಾಜ್ಯ ಸರಕಾರಗಳು ಮಾಡಿದ ಸಾಲ ಮನ್ನಾದಿಂದ ವಿಜಯಪುರ ಹಾಗೂ ಬಾಗಲಕೋಟೆ ಡಿಸಿಸಿ ಬ್ಯಾಂಕಿನಲ್ಲಿ ಸುಮಾರು ₹7500 ಕೋಟಿಯಷ್ಟು ಸಾಲಮನ್ನಾ ಆಗಿದೆ ಎಂದರು. ಇಳಕಲ್ ಚಿತ್ತರಗಿ ಸಂಸ್ಥಾನದ ಗುರುಮಹಾಂತ ಶ್ರೀಗಳು, ಕಮತಗಿ ಹೊಳೆಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.&lt;/p&gt;&lt;p&gt;ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಶಿವಾನಂದ ಉದುಪುಡಿ, ಮುರಗೇಶ ಕಡ್ಲಿಮಟ್ಟಿ, ಮಹಾಂತೇಶ ಮಮದಾಪೂರ, ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜಯ ಬರಗುಂಡಿ, ಉಪಾಧ್ಯಕ್ಷ ಉಮೇಶ ಹುನಗುಂದ, ನಿರ್ದೇಶಕರಾದ ಚಂದ್ರಶೇಖರ ಹರವಿ, ಮುಪ್ಪಣ್ಣ ಶೀಲವಂತ, ರಮೇಶ ಅಗಸಿಮನಿ, ಚಂದ್ರು ಪಟ್ಟಣಶೆಟ್ಟಿ, ಸಂಗಪ್ಪ ಹಡಪದ, ಸಿದ್ಲಿಂಗಪ್ಪ ಬರಗುಂಡಿ, ಅಶೋಕ ಬರಗುಂಡಿ, ಮುತ್ತು ಮೊರಬದ, ರಾಚಣ್ಣ ಕೆರೂರು, ನಾಗಪ್ಪ ಚಿಂದಿ, ಬಸವರಾಜ ಬಂಡಿವಡ್ಡರ, ಶರಣಬಸಪ್ಪ ಚಿಕ್ಕನರಗುಂದ, ಮ್ಯಾನೇಜರ ರಮೇಶ ಹಡಪದ, ಸಂಗಮೇಶ ಜೋಗುರ ಸೇರಿದಂತೆ ಸೇರಿದಂತೆ ಇದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-shivananda-patil-on-cooperative-sector-and-dcc-bank-gvd/articleshow-0op3g18"/>
        </item>
        <item>
            <title><![CDATA[ಕಾಂಗ್ರೆಸ್‌ ಇರುವುದು ಅಧಿಕಾರಕ್ಕಲ್ಲ ಜನರ ಸೇವೆಗೆ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk</link>
            <guid isPermaLink="true">https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk</guid>
            <pubDate>Wed, 06 May 2026 00:26:40 +0530</pubDate>
            <description><![CDATA[&lt;p&gt;ಇನ್ನೆರಡು ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಜನಹಿತದ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಬಡವರೂ ಸೇರಿದಂತೆ ಜಾತ್ಯತೀತವಾಗಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದು ಸಚಿವ ಈಶ್ವರ್&zwnj; ಖಂಡ್ರೆ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9es3asmbdr2q8bxc24xnxzw,imgname-eshwar-khandre-1762506418996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಮಖಂಡಿ (ಮೇ.06): &lt;/strong&gt;ರಾಜ್ಯ ಕಾಂಗ್ರೆಸ್&zwnj;ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್&zwnj; ಇರುವುದು ಅಧಿಕಾರಕ್ಕಲ್ಲ ಜನರ ಸೇವೆಗೆ. ಇದು ಸೇವಾಪಕ್ಷ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್&zwnj; ಖಂಡ್ರೆ ಹೇಳಿದರು. ನಿರೀಕ್ಷಿತ ಉಪ ಚುನಾವಣೆಗಳ ಫಲಿತಾಂಶ ಬಂದಿವೆ. ಇದರಿಂದ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗುವುದಿಲ್ಲ. ಮೂರು ವರ್ಷಗಳ ಕಾಲ ನುಡಿದಂತೆ ನಡೆದು ಜನಪರ ಆಡಳಿತ ನೀಡಿದ್ದೇವೆ.&lt;/p&gt;&lt;p&gt;ಉಳಿದ ಇನ್ನೆರಡು ವರ್ಷಗಳ ಆಡಳಿತ ಅವಧಿಯಲ್ಲಿ ರಾಜ್ಯದ ಜನಹಿತದ ದೃಷ್ಟಿಯನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಬಡವರೂ ಸೇರಿದಂತೆ ಜಾತ್ಯತೀತವಾಗಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಪಕ್ಷದ ವರಿಷ್ಠರ ಸೂಚನೆಯಂತೆ ಎಲ್ಲ ನಾಯಕರು ನಡೆದುಕೊಳ್ಳುತ್ತಾರೆ. ಅಧಿಕಾರಕ್ಕಾಗಿ ಅಭಿಪ್ರಾಯ ಬೇಧವಿಲ್ಲ. ಶಾಸಕರು ತಂಡೋಪತಂಡವಾಗಿ ದೆಹಲಿ ಪ್ರವಾಸದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.ಜನಪರ ಆಡಳಿತಕ್ಕೆ ಮತ:&lt;/p&gt;&lt;p&gt;ಬಾಗಲಕೊಟೆ ಹಾಗೂ ದಾವಣಗೆರೆಯ ಮತದಾರರು ಜನಪರ ಆಡಳಿತಕ್ಕೆ ಮತ ನೀಡಿದ್ದಾರೆ. ಎಲ್ಲ ಸಮಾಜದವರ ಬೆಂಬಲ ಕಾರ್ಯಕರ್ತರ ಶ್ರಮದಿಂದ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಸಾಧನೆಗೆ ದೊರೆತ ಜಯವಾಗಿದೆ. ಕಾಂಗ್ರೆಸ್&zwnj; ಗೆಲುವಿನ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್&zwnj;, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಮುಖಂಡರ ಶ್ರಮವಿದೆ. ಮುಂಬರುವ 2028ರ ಚುನಾವಣೆಗಳಿಗೆ ಉಪ ಚುನಾವಣೆ ಫಲಿತಾಂಶಗಳು ಕಾಂಗ್ರೆಸ್&zwnj; ಗೆಲುವಿನ ಸಂದೇಶ ನೀಡಿವೆ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಪಂಚರಾಜ್ಯಗಳ ಚುನಾವಣೆ&lt;/strong&gt;&lt;/p&gt;&lt;p&gt;ಕೇರಳದ ಪ್ರಜ್ಞಾವಂತ ಮತದಾರರು ಯುಡಿಎಫ್&zwnj;ಗೆ 89 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ತಮಿಳುನಾಡಿನ ಜನ ಟಿವಿಕೆಗೆ ಮನ್ನಣೆ ನೀಡಿದ್ದು, ಜನರು ಬದಲಾವಣೆ ಬಯಸಿದ್ದಾರೆ. ಪಶ್ಚಿಮ ಬಂಗಾಳ, ಪುದುಚೇರಿ, ಅಸ್ಸಾಂ ಫಲಿತಾಂಶಗಳನ್ನು ನೋಡಿದ್ದೇವೆ. ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು. ಚುನಾವಣೆ ಆಯೋಗ, ಇಡಿ, ಐಟಿ ಮುಂತಾದ ಸಂಸ್ಥೆಗಳು ಸಂವಿಧಾನ ಬದ್ಧವಾಗಿ ನಡೆಯಬೇಕು. ಕಾಂಗ್ರೆಸ್ ಮುಖಂಡರ ಮೇಲೆ ಇಡಿ ದಾಳಿಗಳಾಗುತ್ತವೆ ಎಂದ ಅವರು, ಬಿಜೆಪಿ ಸೇರಿದರೆ ಕ್ಲೀನ್&zwnj; ಚಿಟ್&zwnj; ನೀಡಲಾಗುತ್ತಿದೆ. ಇದ್ಯಾವ ನ್ಯಾಯ? ಪಾರದರ್ಶಕತೆ ಇಲ್ಲದಂತಾಗಿದೆ.&lt;/p&gt;&lt;p&gt;ಆಮ್&zwnj; ಆದ್ಮಿ ಪಕ್ಷದ 7 ಜನ ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದು, ಎಎಪಿಯ ಶಾಸಕರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಜನ ಮತದಾರರನ್ನು ಎಸ್&zwnj;ಐಆರ್&zwnj; ನೆಪದಲ್ಲಿ ಪಟ್ಟಿಯಿಂದ ಕೈಬಿಡಲಾಗಿದೆ. ನುಸುಳುಕೋರರು ಎಂದು ಹೇಳುತ್ತಿರುವುದು ಕೇಂದ್ರ ಸರ್ಕಾರದ ವೈಫಲ್ಯವಲ್ಲವೇ, ಪೆಹಲ್ಗಾಮ್&zwnj; ದಾಳಿ, ಕಾಶ್ಮೀರದ ದಾಳಿಗಳು ಭದ್ರತಾ ವ್ಯವಸ್ಥೆಯ ವೈಫಲ್ಯವಾಗಿದೆ. ಲಕ್ಷಾಂತರ ಮತದಾರರ ಹಕ್ಕು ಕಸಿದುಕೊಳ್ಳಲಾಗಿದೆ. ಇದಕ್ಕೆಲ್ಲ ಸಮಯ ಬಂದಾಗ ಉತ್ತರ ದೊರೆಯುತ್ತದೆ ಎಂದರು.&lt;/p&gt;&lt;h2&gt;&lt;strong&gt;ಜಮಖಂಡಿ ಕ್ಷೇತ್ರದೊಂದಿಗೆ ಅವಿನಾಭಾವ ಸಂಬಂಧ&lt;/strong&gt;&lt;/h2&gt;&lt;p&gt;ಜಮಖಂಡಿ ಕ್ಷೇತ್ರಕ್ಕೂ ತಮಗೂ ಅವಿನಾಭಾವ ಸಂಬಂಧವಿದೆ. ಹಿಂದಿನ ಶಾಸಕರಾಗಿದ್ದ ದಿ.ಸಿದ್ದು ನ್ಯಾಮಗೌಡರು ಕ್ಷೇತ್ರದ ಅಭಿವೃದ್ಧಿಗೆ ಅಮೋಘ ಕೊಡುಗೆ ನೀಡಿದ್ದಾರೆ. ನಂತರದ ಚುನಾವಣೆಗಳಲ್ಲಿ ನನ್ನ ನೇತೃತ್ವವಿತ್ತು. ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿಯ ಜನರ ಸುಖ ದುಃಖದಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/eshwar-khandre-congress-no-confusion-karnataka-politics-gvd/articleshow-4htnpqk"/>
        </item>
        <item>
            <title><![CDATA[ಕರ್ನಾಟಕದಿಂದ ಸೋಲಾಪುರ ಮಾರ್ಗವಾಗಿ ಹೋಗುವ ಹಲವು ರೈಲು ಸಂಚಾರ ನಿರ್ಬಂಧ, ಜೂ. 5ರಿಂದ10ರವರೆಗೆ ಹಲವು ಟ್ರೈನ್ ರದ್ದು!]]></title>
            <link>https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</link>
            <guid isPermaLink="true">https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep</guid>
            <pubDate>Fri, 05 Jun 2026 12:14:53 +0530</pubDate>
            <description><![CDATA[ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ನಡೆಯುತ್ತಿರುವ ಮೇಲ್ದರ್ಜೆ ಕಾಮಗಾರಿಯಿಂದಾಗಿ ಕೇಂದ್ರ ರೈಲ್ವೆಯು ಜೂನ್ 5 ರಿಂದ 10 ರವರೆಗೆ ಹಲವು ರೈಲುಗಳ ಸಂಚಾರವನ್ನು ನಿರ್ಬಂಧಿಸಿದೆ. ಈ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರ ನಿಯಂತ್ರಣ, ಮಾರ್ಗ ಬದಲಾವಣೆ ಹಾಗೂ ಸೋಲಾಪುರ-ಕಲಬುರಗಿ ವಿಶೇಷ ರೈಲು ರದ್ದತಿಯಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks4rgymmydvxhdywfct5zw88,imgname-indian-railways--2--1779350141588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್&zwnj;ನಲ್ಲಿ ಮೇಲ್ದರ್ಜೆ ಕಾಮಗಾರಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಇಂಟರ್&zwnj;ಲಾಕಿಂಗ್&zwnj;ನ್ನು ನಿಯೋಜಿಸಲು ಪೂರ್ವ-ಇಂಟರ್&zwnj;ಲಾಕಿಂಗ್ ಅಲ್ಲದ ಮತ್ತು ಇಂಟರ್&zwnj;ಲಾಕಿಂಗ್ ಅಲ್ಲದ ಕೆಲಸದಿಂದಾಗಿ ಜೂನ್ 5ರಿಂದ 10ರವರೆಗೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಹಲವು ರೈಲುಗಳ ಮೇಲೆ ಸಂಚಾರ ನಿರ್ಬಂಧ ವಿಧಿಸಿದೆ.&lt;/p&gt;&lt;h2&gt;ನಿಯಂತ್ರಣ ಯಾವ ರೈಲುಗಳ ಮೇಲೆ ?&lt;/h2&gt;&lt;p&gt;ಜೂನ್&zwnj; 5 ರಂದು ರೈಲು ಸಂಖ್ಯೆ 11311 ಸೋಲಾಪುರ-ಹಾಸನ ಎಕ್ಸ್&zwnj;ಪ್ರೆಸ್ ಹಾಗೂ ರೈಲು ಸಂಖ್ಯೆ 17308 ಬಾಗಲಕೋಟೆ- ಮೈಸೂರು ಬಸವಾ ಎಕ್ಸ್&zwnj;ಪ್ರೆಸ್ ಸಂಚಾರದ ಮೇಲೆ 45 ನಿಮಿಷಗಳ ನಿಯಂತ್ರಣವಿರಲಿದೆ. ಜೂ. 8 ರಂದು ರೈಲು ಸಂಖ್ಯೆ 18520 ಎಲ್&zwnj;ಟಿಟಿ ಮುಂಬೈ- ವಿಶಾಖಪಟ್ಟಣ ಎಕ್ಸ್&zwnj;ಪ್ರೆಸ್ಜೂ 2 ಗಂಟೆ, ರೈಲು ಸಂಖ್ಯೆ 01465 ಸೋಲಾಪುರ-ಕಲಬುರಗಿ ವಿಶೇಷ 1 ಗಂಟೆ 30 ನಿಮಿಷ, ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ 30 ನಿಮಿಷ, ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 30 ನಿಮಿಷ ನಿಯಂತ್ರಣದಲ್ಲಿರಲಿವೆ.&lt;/p&gt;&lt;p&gt;ಜೂನ್&zwnj; 9 ರಂದು ರೈಲು ಸಂಖ್ಯೆ 16382 ಕನ್ಯಾಕುಮಾರಿ-ಪುಣೆ ಎಕ್ಸ್&zwnj;ಪ್ರೆಸ್ 1 ಗಂಟೆ 15 ನಿಮಿಷ, ರೈಲು ಸಂಖ್ಯೆ 11020 ಭುವನೇಶ್ವರ- ಸಿಎಸ್&zwnj;ಎಂಟಿ ಮುಂಬೈ ಎಕ್ಸ್&zwnj;ಪ್ರೆಸ್ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.&lt;/p&gt;&lt;h2&gt;ಕೆಲವು ರೈಲು ಮಾರ್ಗ ಬದಲಾವಣೆ:&lt;/h2&gt;&lt;p&gt;ರೈಲು ಸಂಖ್ಯೆ 57662 ವಿಜಯಪುರ-ರಾಯಚೂರು ಪ್ಯಾಸೆಂಜರ್ ಜೂ. 5 ರಿಂದ 10 ರ ವರೆಗೆ ವಿಜಯಪುರ-ಹೋಟ್ಗಿ-ವಾಡಿ ಮಾರ್ಗ, ರೈಲು ಸಂಖ್ಯೆ 57661 ರಾಯಚೂರು-ವಿಜಯಪುರ ಪ್ಯಾಸೆಂಜರ್ ವಾಡಿ-ಹೋಟ್ಗಿ-ವಿಜಯಪುರ ಮೂಲಕ ಮಾರ್ಗ ಬದಲಾವಣೆ ಮಾಡಲಾಗುತ್ತದೆ.&lt;/p&gt;&lt;p&gt;ಕೆಳಗಿನ ರೈಲುಗಳನ್ನು ನಿರ್ದಿಷ್ಟಪಡಿಸಿದಂತೆ ಮರುಹೊಂದಿಸಲಾಗುತ್ತದೆ. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ಗುಂಬಜ್ ಎಕ್ಸ್&zwnj;ಪ್ರೆಸ್ ಜೂ. 10 ರಂದು 2 ಗಂಟೆ 20 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 11301 ಸಿಎಸ್&zwnj;ಎಂಟಿ ಮುಂಬೈ-ಕೆಎಸ್&zwnj;ಆರ್ ಬೆಂಗಳೂರು ಉದ್ಯಾನ ಎಕ್ಸ್&zwnj;ಪ್ರೆಸ್ 2 ಗಂಟೆ 15 ನಿಮಿಷಗಳ ಕಾಲ ಮರುಹೊಂದಿಸಲಾಗುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 01465 ಸೋಲಾಪುರ- ಕಲಬುರಗಿ ಮತ್ತು ರೈಲು ಸಂಖ್ಯೆ 01466 ಕಲಬುರಗಿ- ಸೋಲಾಪುರ ಈ ರೈಲು ಜೂ. 10 ರಂದು ರದ್ದು ಮಾಡಲಾಗಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/solapur-division-rail-traffic-hit-kalaburagi-vijayapura-sections-check-schedule-changes-for-golgumbaz-express-trains-gdp/articleshow-61dg8ep"/>
        </item>
        <item>
            <title><![CDATA[ಕಲಾದಗಿಯ 2004-05ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಅಪೂರ್ವ ಗುರುವಂದನೆ & ಸ್ನೇಹ ಸಮ್ಮಿಲನ]]></title>
            <link>https://kannada.asianetnews.com/karnataka-districts/bagalkote-kaladagi-a-unique-guru-vandana-and-friendship-gathering-by-sslc-students-of-2004-and-2000-mrq/articleshow-6hyt6i0</link>
            <guid isPermaLink="true">https://kannada.asianetnews.com/karnataka-districts/bagalkote-kaladagi-a-unique-guru-vandana-and-friendship-gathering-by-sslc-students-of-2004-and-2000-mrq/articleshow-6hyt6i0</guid>
            <pubDate>Mon, 18 May 2026 10:50:49 +0530</pubDate>
            <description><![CDATA[ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯ 2004-05ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ತಮಗೆ ಜ್ಞಾನ ನೀಡಿದ ಗುರುಗಳನ್ನು ಗೌರವಿಸಲು ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಕಿರುಕಾಣಿಕೆ ನೀಡಿ ಸನ್ಮಾನಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01krwr517dtvsss8dbhxyra6dv,imgname-sslc-students-1779081315565.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಅಕ್ಷರ ಜ್ಞಾನ ಕಲಿಸಿದ ಗುರುಗಳನ್ನು ಜೀವಮಾನಪೂರ್ತಿ ಮರೆಯಲು ಸಾಧ್ಯವಿಲ್ಲ. ಅಂತಹ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಆಯೋಜಿಸಿ ಕಿರು ಗುರುಕಾಣಿಕೆ ನೀಡಿ ಗೌರವಿಸಿ ಸನ್ಮಾನ ಮಾಡಿರುವುದು ಅಭೂತಪೂರ್ವ ಕಾರ್ಯಕ್ರಮ ಎಂದು ಹಣ್ಣು ಬೆಳೆಗಾರರ ಸಂಘದ ಉಪಾಧ್ಯಕ್ಷ ಎಸ್.ಬಿ. ಅಂಗಡಿ ಅಭಿಪ್ರಾಯಪಟ್ಟರು.&lt;/p&gt;&lt;p&gt;ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯ 2004-05ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.&lt;/p&gt;&lt;p&gt;ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಟಿ.ಪಾಟೀಲ, ಕಾರ್ಯದರ್ಶಿ ವಿ.ಜಿ.ದೇಶಪಾಂಡೆ, ಶಿಕ್ಷಕ ಎಂ.ಆರ್.ದೇಶಪಾಂಡೆ, ಶಿಕ್ಷಕ ಬಿ.ಎಲ್. ವಾಸನದ, ಎಸ್.ಎಂ. ಸೂಳಿಕೇರಿ, ಟಿ.ವಿ. ನರಸನ್ನವರ, ಎಂ.ವೈ. ಹುಲ್ಲಿಕೇರಿ, ಯು.ಎಲ್. ಕಾಂಬಳೆ, ಎಂ.ಕೆ. ಧಾರವಾಡ ಮಾತನಾಡಿದರು.&lt;/p&gt;&lt;p&gt;ಹಣ್ಣು ಬೆಳೆಗಾರರ ಸಂಘದ .ಕಾರ್ಯದರ್ಶಿ ಎಸ್.ಆರ್. ವಾಘ್, ಕೋಶಾಧ್ಯಕ್ಷ ಕೆ.ಎಲ್. ಬಿಲಕೇರಿ, ಹ.ಬೆ.ವಿ.ಸಂ ಅಧ್ಯಕ್ಷ ಕೆ.ಟಿ.ಪಾಟೀಲ, ಮುಖ್ಯಶಿಕ್ಷಕ ಆರ್.ವಿ.ಜಾಧವ, ಶ್ರೀಕಾಂತ ಕೆರಕಲಮಟ್ಟಿ, ಶಿಕ್ಷಕ ಆರ್.ಪಿ.ಜೋಶಿ, ಎಸ್.ಎಂ.ಕಲವಾರ್, ಪಿ.ಎಚ್.ಕವಡಿಮಟ್ಟಿ, ಯು.ಎಸ್.ರಾಜನಾಳ, ಕೆ.ಆರ್.ಜೋಶಿ, ಜಿ.ಆರ್.ಹಂಜಾಟೆ, ಜಿ.ಕೆ.ಹೊಸಮನಿ, ವಾಯ್.ಆರ್.ಮಕಾಣಿ, ಪಿ.ಆಯ್.ಕುಲಕರ್ಣಿ, ಎ.ಜಿ.ಅಚನೂರ, ಐ.ಕೆ.ಪತ್ತಾರ, ಬಿ.ಎಂ.ತೆಗ್ಗಿ, ಎಂ.ಎಂ.ಮಂಟೂರು, ಆರ್.ವಾಯ್.ವಾಸನದ ಇನ್ನಿತರರು ಇದ್ದರು.&lt;/p&gt;&lt;h2&gt;&lt;strong&gt;ಮುಧೋಳ: .ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ&lt;/strong&gt;&lt;/h2&gt;&lt;p&gt;ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜರ ಜನ್ಮ ಜಯಂತಿ ನಿಮಿತ್ತ ಛತ್ರಪತಿ ಸಂಭಾಜಿ ಮಹಾರಾಜ ಸೇವಾ ಸಮಿತಿ ಮುಧೋಳ ವತಿಯಿಂದ ಭಾನುವಾರ ನಗರದ ಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ, ಎಂಜಿನಿಯರಿಂಗ್ ಮತ್ತಿತರ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಓದಿದ ಶಾಲೆಗೆ 25 ವರ್ಷದ ಬಳಿಕ ಮರಳಿದ 1999-2001 ಬ್ಯಾಚ್&zwnj;ನ ವಿದ್ಯಾರ್ಥಿಗಳು: ಭಾವನಾತ್ಮಕ ಸಮಾರಂಭ&lt;/strong&gt;&lt;/p&gt;&lt;p&gt;ಮುಖ್ಯ ವಕ್ತಾರರಾಗಿದ್ದ ನಂದು ಗಾಯಕವಾಡ, ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜ ಸೇವಾ ಸಮಿತಿ ಮುಧೋಳ ಘಟಕದ ಅಧ್ಯಕ್ಷ ರಾಜೇಶ ಗೋರ್ಪಡೆ, ಉಪಾಧ್ಯಕ್ಷ ಪರಶುರಾಮ ನಿಗಡೆ, ಕಿಶೋರ ಕೋರ್ಪಡೆ, ವಿಠ್ಠಲ ಜಾಂಬ್ರೆ, ವಿಠ್ಠಲ ಕುಡೆ, ಪರಶುರಾಮ ಕದಂ, ಗೋವಿಂದ ಕೂಡಗ, ವಿಜಯ ಶಿಂಧೆ, ಸತೀಶ ಗೋರ್ಪಡೆ, ಸುರೇಶ ಪವಾರ್, ಸಂಜು ನಿಗಡೆ, ಸಂಜು ಗೋರ್ಪಡೆ, ಸಚಿನ್ ಗೋರ್ಪಡೆ, ಸುರೇಶ ಕೋಡಗ, ದೇವಾ ತೋರತ್&zwnj; ಹಾಗೂ ಮಾತೆಯರು, ಹಿರಿಯರು ಉಪಸ್ಥಿತರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;60 ವರ್ಷದ ಬಳಿಕ ಗೆಳೆಯರ ಭೇಟಿ; ಪದವಿ ಮುಗಿದಾಗ ಇದ್ದಿದ್ದು 122, ಈಗ ಉಳಿದಿರೋದು 12 ಜನ ಮಾತ್ರ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-kaladagi-a-unique-guru-vandana-and-friendship-gathering-by-sslc-students-of-2004-and-2000-mrq/articleshow-6hyt6i0"/>
        </item>
        <item>
            <title><![CDATA[ಹಿಂಬದಿ ಚಕ್ರ ತುಂಡಾಗಿ ಪಲ್ಟಿ ಹೊಡೆದ ಮಾವು ತುಂಬಿದ ಲಾರಿ; ರಸ್ತೆಯಲ್ಲಿ ಚೆಲ್ಲಿದ ಮಾವಿನ ಹಣ್ಣು!]]></title>
            <link>https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp</link>
            <guid isPermaLink="true">https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp</guid>
            <pubDate>Thu, 14 May 2026 16:44:35 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್&zwnj;ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಗೆ ಚೆಲ್ಲಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krk2r9fe0ft0x6ehksr09v6c,imgname-bagalkote-mango-laden-truck-overturns-1778756888046.jpg" type="image/jpeg" height="390" width="690"/>
            <content:encoded><![CDATA[ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್&zwnj;ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಗೆ ಚೆಲ್ಲಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.&lt;img&gt;&lt;p&gt;&lt;strong&gt;ಬಾಗಲಕೋಟೆ (ಮೇ 14): ಜಿ&lt;/strong&gt;ಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಲಾರಿಯ ಹಿಂಬದಿಯ ಚಕ್ರಗಳು ವಾಹನದಿಂದ ಪ್ರತ್ಯೇಕವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.&lt;/p&gt;&lt;img&gt;&lt;p&gt;ಮೂಲಗಳ ಪ್ರಕಾರ, ಈ ಲಾರಿಯು ಮಾವಿನ ಹಣ್ಣನ್ನು ತುಂಬಿಕೊಂಡು ಕಲಬುರ್ಗಿ ಕಡೆಗೆ ವೇಗವಾಗಿ ಹೊರಟಿತ್ತು. ಇಳಕಲ್ ತಾಲೂಕಿನ ಗೊರಬಾಳ ಕ್ರಾಸ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಮಧ್ಯೆ ಇದ್ದ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ. ಲಾರಿ ಅತಿ ವೇಗದಲ್ಲಿದ್ದ ಕಾರಣ ಡಿವೈಡರ್&zwnj;ಗೆ ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿಯ ಪಾಟಾ ಕಟ್ ಆಗಿ, ವಾಹನದಿಂದ ಚಕ್ರಗಳೇ ಕಿತ್ತು ಬಂದಿವೆ.&lt;/p&gt;&lt;img&gt;&lt;p&gt;ಅಪಘಾತ ಸಂಭವಿಸಿದ ತಕ್ಷಣ ಲಾರಿಯಲ್ಲಿದ್ದ ಮಾವಿನ ಹಣ್ಣಿನ ಬಾಕ್ಸ್&zwnj;ಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ನೂರಾರು ಕೆಜಿ ಮಾವಿನ ಹಣ್ಣುಗಳು ರಸ್ತೆಯ ಮೇಲೆ ಹರಡಿಕೊಂಡಿದ್ದು, ಜಖಂಗೊಂಡಿವೆ.&lt;/p&gt;&lt;img&gt;&lt;p&gt;ಘಟನೆಯಲ್ಲಿ ಲಾರಿ ಕೂಡ ಸಂಪೂರ್ಣ ಜಖಂಗೊಂಡಿದ್ದು, ಮಾಲೀಕರಿಗೆ ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.&lt;/p&gt;&lt;img&gt;&lt;p&gt;ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ನಂತರ ಸ್ಥಳಕ್ಕೆ ಆಗಮಿಸಿದವರು ರಸ್ತೆಯ ಮೇಲೆ ಬಿದ್ದಿದ್ದ ಮಾವಿನ ಹಣ್ಣುಗಳನ್ನು ಮತ್ತು ಬಾಕ್ಸ್&zwnj;ಗಳನ್ನು ಪಕ್ಕಕ್ಕೆ ಸರಿಸಿದರು. ಉಳಿದ ಹಣ್ಣುಗಳನ್ನು ಮತ್ತೊಂದು ಲಾರಿಗೆ ತುಂಬಿಸಿ ಸಾಗಿಸುವ ವ್ಯವಸ್ಥೆ ಮಾಡಲಾಯಿತು.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/bagalkote-mango-laden-truck-overturns-on-nh-50-heavy-loss-as-fruits-spill-on-road-sat-8angwsp"/>
        </item>
        <item>
            <title><![CDATA[ಬಾಗಲಕೋಟೆ ಬಿಜೆಪಿ ಸೋಲಿಗೆ 'ಕೈ' ಅಲ್ಲ, ಈ ಮೂವರು ನಾಯಕರ 'ನಾಲಗೆ'ಗಳೇ ಕಾರಣ; ಆ ಒಂದು ಫೋನ್ ಕರೆಯಲ್ಲಿ ಬಯಲು!]]></title>
            <link>https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5</link>
            <guid isPermaLink="true">https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5</guid>
            <pubDate>Tue, 05 May 2026 16:35:13 +0530</pubDate>
            <description><![CDATA[&lt;p&gt;ಬಾಗಲಕೋಟೆಯಲ್ಲಿ ಬಿಜೆಪಿಯ ಸೋಲಿಗೆ ವಿರೋಧ ಪಕ್ಷಕ್ಕಿಂತ ಸ್ವಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಗಳೇ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಚಾರದ ವೇಳೆ ಸಿ.ಸಿ. ಪಾಟೀಲ್, ಪ್ರತಾಪ್ ಸಿಂಹ, ಮತ್ತು ಯತ್ನಾಳ್ ಅವರ ಮಾತುಗಳು ಕುರುಬ, ಅಲ್ಪಸಂಖ್ಯಾತ ಹಾಗೂ ಲಿಂಗಾಯತ ಸಮುದಾಯಗಳ ಮತಗಳು ಕೈತಪ್ಪಲು ಕಾರಣವಾದವ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqvwm0kt27rpky2vsnb1r224,imgname-----------------------2026-05-05t162806.439-1777978704506.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:(ಮೇ.5)&lt;/strong&gt; ಸುಲಭವಾಗಿ ಗೆಲ್ಲಬಹುದಾಗಿದ್ದ ಕ್ಷೇತ್ರದಲ್ಲಿ ಬಿಜೆಪಿ ಮಕಾಡೆ ಮಲಗಿದ್ದು ಯಾಕೆ? ಭದ್ರಕೋಟೆಯಲ್ಲೇ ಕಮಲ ಬಾಡಲು ಕಾರಣವೇನು? ಪ್ರಚಾರದ ಹಾದಿಯಲ್ಲಿ ಆದ ಎಡವಟ್ಟುಗಳೇನು? &ndash; ಹೀಗೆ ಸಾಲು ಸಾಲು ಪ್ರಶ್ನೆಗಳನ್ನಿಟ್ಟುಕೊಂಡು ಬಾಗಲಕೋಟೆ ಬಿಜೆಪಿ ಪಾಳಯದಲ್ಲಿ ಈಗ ತೀವ್ರ ಆತ್ಮಾವಲೋಕನ ಶುರುವಾಗಿದೆ.&lt;/p&gt;&lt;p&gt;ವಿಶೇಷವೆಂದರೆ, ಈ ಸೋಲಿಗೆ ವಿರೋಧ ಪಕ್ಷದವರ ಅಬ್ಬರದ, ಪ್ರಚಾರಕ್ಕಿಂತಲೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದ ಸ್ವಪಕ್ಷದ ಸ್ಟಾರ್ ನಾಯಕರ ಆಕ್ಷೇಪಾರ್ಹ ಹೇಳಿಕೆಗಳೇ ಅಹಿಂದ ಮತಗಳನ್ನು ಕೆರಳಿಸಿ, ಬಿಜೆಪಿಯ ಕೈ ಹಿಡಿಯಬೇಕಿದ್ದ ಮತಗಳನ್ನು ದೂರ ಮಾಡಿವೆ ಎಂಬ ಆರೋಪಗಳು ಕೇಳಿಬಂದಿವೆ.&lt;/p&gt;&lt;h2&gt;ಈ ಮೂವರ ನಾಯಕರ ಹೇಳಿಕೆಗಳಿಂದಲೇ ಸೋಲು?&lt;/h2&gt;&lt;p&gt;ಈ ಮೂವರು ನಾಯಕರ ಹೇಳಿಕೆಗಳೇ ತಮ್ಮ ಅಭ್ಯರ್ಥಿ ಸೋಲಿಗೆ ಕಾರಣವಾಯ್ತಾ?&lt;/p&gt;&lt;p&gt;ಪ್ರಚಾರದ ವೇಳೆ ಪ್ರತಾಪ್ ಸಿಂಹ, &zwnj;ಸಿಸಿ&zwnj; ಪಾಟೀಲ್, ಯತ್ನಾಳ್ ಹೇಳಿಕೆಗಳೇ ಮುಳುವಾಯ್ತಾ ಮೂವರು &zwnj;ನಾಯಕರು ಕೊಟ್ಟ&zwnj; ಹೇಳಿಕೆಗಳೇ&zwnj; ಪ್ರಬಲ ಸಮುದಾಯದ ಮತಗಳ ಒಡಕಿಗೆ ಕಾರಣವಾಯ್ತಾ? ಹಾಗಾದರೆ ಈ ಮೂವರು ನಾಯಕರು ಪ್ರಚಾರದ ವೇಳೆ ಹೇಳಿದ್ದೇನು?&lt;/p&gt;&lt;h3&gt;ಸಿಎಂ ಸಿದ್ದರಾಮಯ್ಯಗೆ ಟುರ್.. ಎಂದಿದ್ದ ಸಿಸಿ ಪಾಟೀಲ್&lt;/h3&gt;&lt;p&gt;ಪ್ರಚಾರದ ವೇಳೆ ಮಾಜಿ ಸಚಿವ ಸಿಸಿ ಪಾಟೀಲ್ ನೀಡಿದ ಹೇಳಿಕೆಗಳು ಎರಡು ಪ್ರಬಲ ಸಮುದಾಯಗಳನ್ನು ಬಿಜೆಪಿಯ ವಿರುದ್ಧ ತಿರುಗಿಬೀಳುವಂತೆ ಮಾಡಿದೆ ಎಂಬ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಪರೋಕ್ಷವಾಗಿ 'ಟುರ್..' ಎಂದು ಉದ್ಗರಿಸಿದ್ದು ಕುರುಬ ಸಮುದಾಯದ ಕೆಂಗಣ್ಣಿಗೆ ಗುರಿಯಾದ್ರೆ, 'ಗಡ್ಡದವರನ್ನ ಸೋಲಿಸಬೇಕು' ಎನ್ನುವ ಮೂಲಕ ಅಲ್ಪಸಂಖ್ಯಾತ ಸಮುದಾಯವನ್ನು ನೇರವಾಗಿ ನಿಂದಿಸಿದ್ದು ಕೂಡ ಪೆಟ್ಟು ನೀಡಿದೆ. ಪಂಚಮಸಾಲಿ ಸಭೆಯಲ್ಲಿ ಸಿಸಿ ಪಾಟೀಲ್ ನೀಡಿದ ಇಂತಹ ಪೀಕಲಾಟದ ಹೇಳಿಕೆಗಳು ಮತಗಳ ಒಡಕಿಗೆ ನೇರ ಕಾರಣವಾಯ್ತು ಎಂದು ಸ್ಥಳೀಯ ನಾಯಕರು ದೂರಿದ್ದಾರೆ.&lt;/p&gt;&lt;h3&gt;ಪ್ರತಾಪ್ ಸಿಂಹ ಹೇಳಿಕೆಯಿಂದ 35 ಸಾವಿರ ಕುರುಬ ಮತಗಳಿಗೆ ಬಿತ್ತು ಕತ್ತರಿ?&lt;/h3&gt;&lt;p&gt;ಕ್ಷೇತ್ರದಲ್ಲಿ ಸರಿಸುಮಾರು 35 ಸಾವಿರದಷ್ಟಿರುವ ಕುರುಬ ಸಮುದಾಯದ ಮತಗಳು ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಬೇಕಿತ್ತು. ಆದರೆ, ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯನವರ ಬಗ್ಗೆ ನೀಡಿದ 'ತುದಿ ಕಟ್ ಮಾಡಿಸಿಕೊಳ್ಳಲಿ' ಎಂಬ ಅಶ್ಲೀಲ ಹಾಗೂ ವೈಯಕ್ತಿಕ ನಿಂದನೆಯ ಹೇಳಿಕೆ ಇಡೀ ಸಮುದಾಯವನ್ನು ಬಿಜೆಪಿ ವಿರುದ್ಧ ಕೆರಳಿಸಿತು.&lt;/p&gt;&lt;p&gt;ಈ ಹೇಳಿಕೆಯಿಂದ ಬೇಸತ್ತ ಸಮುದಾಯದ ಮತದಾರರು ಬಿಜೆಪಿಯನ್ನು ಕೈಬಿಟ್ಟು ಒಗ್ಗಟ್ಟಾಗಿ ಕಾಂಗ್ರೆಸ್ ಪರ ನಿಂತರು. ಒಬ್ಬ ನಾಯಕನ ಅತಿರೇಕದ ಮಾತುಗಳು ಪಕ್ಷಕ್ಕೆ ಬರಬೇಕಿದ್ದ ಮತಗಳನ್ನು ಹೇಗೆ ಗುಡಿಸಿ ಹಾಕುತ್ತವೆ ಎಂಬುದಕ್ಕೆ ಪ್ರತಾಪ್ ಸಿಂಹ ಅವರ ಈ ಹೇಳಿಕೆಯೇ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ.&lt;/p&gt;&lt;h3&gt;ಸ್ವಪಕ್ಷೀಯರನ್ನೇ ಟೀಕಿಸಿ ಗೆಲುವಿನ ಹಾದಿಗೆ ಮುಳ್ಳಾದ್ರೆ ಯತ್ನಾಳ್?&lt;/h3&gt;&lt;p&gt;ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಡಾಫೆಯ ನಡೆ ಕೂಡ ಪಕ್ಷದ ಒಳಗೆ ದೊಡ್ಡ ಬಿರುಕು ಮೂಡಿಸಿದೆ. ಪ್ರಚಾರಕ್ಕೆ ಬಂದಿದ್ದ ಸ್ವಪಕ್ಷದ ನಾಯಕರನ್ನೇ 'ಸೋತವರೆಲ್ಲಾ ಇಲ್ಲಿಗೆ ಮತ ಕೇಳಲು ಬಂದಿದ್ದಾರೆ' ಎಂದು ಲೇವಡಿ ಮಾಡಿದ್ದು ಮತದಾರರಲ್ಲಿ ತಪ್ಪು ಸಂದೇಶ ರವಾನಿಸಿದೆ. ವಿಜಯಪುರದಿಂದ ಬಂದಿದ್ದ ನಾಯಕರನ್ನು ಅವಮಾನಿಸಿದ್ದು ಮಾತ್ರವಲ್ಲದೆ, ಪ್ರಚಾರದುದ್ದಕ್ಕೂ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಕಿಡಿಕಾರಿದ್ದು ಲಿಂಗಾಯತ ಮತಗಳ ಮೇಲೆ ಹೊಡೆತ ಬಿದ್ದಿದೆ. ತನ್ನದೇ ಪಕ್ಷದ ಹಿರಿಯ ನಾಯಕರನ್ನು ಬೈದುಕೊಂಡು ಓಡಾಡಿದ ಯತ್ನಾಳ್ ವರ್ತನೆಯಿಂದಾಗಿ ಮತದಾರರು ಬಿಜೆಪಿಯಿಂದ ಅಂತರ ಕಾಯ್ದುಕೊಂಡರು ಎಂಬ ಅಸಮಾಧಾನ ವ್ಯಕ್ತವಾಗಿದೆ.&lt;/p&gt;&lt;p&gt;ಸ್ಥಳೀಯ ನಾಯಕರ ಆಕ್ರೋಶ, ಫೋನ್ ಕರೆಯಲ್ಲಿ ಬಯಲು!&lt;/p&gt;&lt;p&gt;ಕಳೆದ ರಾತ್ರಿ ಕ್ಷೇತ್ರದ ಸ್ಥಳೀಯ ನಾಯಕರು ಮತ್ತು ಪ್ರಮುಖ ಮುಖಂಡರು ಫೋನ್ ಮೂಲಕ ನಡೆಸಿದ ಸಂಭಾಷಣೆಯಲ್ಲಿ ಈ ಎಲ್ಲಾ ಕಹಿ ಸತ್ಯಗಳು ಹೊರಬಂದಿವೆ. 'ನಾಯಕರು ಬಂದು ಗೆಲುವಿಗೆ ದಾರಿಯಾಗುವ ಬದಲು, ಅವರ ನಾಲಿಗೆಯಿಂದಾಗಿಯೇ ನಾವು ಸೋಲುವಂತಾಯ್ತು' ಎಂದು ಮುಖಂಡರು ಬೇಸರ ಹೊರಹಾಕಿದ್ದಾರೆ. ಸದ್ಯ ಬಾಗಲಕೋಟೆ ಬಿಜೆಪಿಯಲ್ಲಿ ಈ 'ಸೆಲ್ಫ್ ಗೋಲ್' ಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ.&lt;/p&gt;&lt;p&gt;ಈ ಸೋಲಿನ ನಂತರ ಪಕ್ಷದ ಹೈಕಮಾಂಡ್ ಈ ನಾಯಕರ ಹೇಳಿಕೆಗಳ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/did-pratap-simha-cc-patil-and-yatnal-s-remarks-cost-bjp-the-bagalkot-bypoll/articleshow-b7pq4y5"/>
        </item>
        <item>
            <title><![CDATA[ಗಮನಿಸಿ, ಮೇ 20 ರಿಂದ ಜೂನ್ 2ರವರೆಗೆ ಮಂಗಳೂರಿನಿಂದ ಹೊರಡುವ ಎಲ್ಲಾ ರೈಲುಗಳ ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆ!]]></title>
            <link>https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np</link>
            <guid isPermaLink="true">https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np</guid>
            <pubDate>Tue, 19 May 2026 14:30:18 +0530</pubDate>
            <description><![CDATA[ನೈಋತ್ಯ ರೈಲ್ವೆಯ ತಿರುವನಂತಪುರಂ ವಿಭಾಗದಲ್ಲಿ ಹಳಿ ನಿರ್ವಹಣೆ ಹಿನ್ನೆಲೆ, ಹಲವು ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಮಂಗಳೂರು-ವಿಜಯಪುರ ಎಕ್ಸ್&zwnj;ಪ್ರೆಸ್ ಭಾಗಶಃ ರದ್ದಾಗಿದ್ದು, ಅಂತ್ಯೋದಯ ಮತ್ತು ಮಾವೇಲಿ ಎಕ್ಸ್&zwnj;ಪ್ರೆಸ್ ಸೇರಿದಂತೆ ಇತರ ರೈಲುಗಳನ್ನು ಬೇರೆ ಮಾರ್ಗದಲ್ಲಿ ಓಡಿಸಲಾಗುವುದು ಅಥವಾ ನಿರ್ಬಂಧಿಸಲಾಗುವುದು.]]></description>
            <media:content url="https://static.asianetnews.com/images/w-1280,h-720,format-jpg,imgid-01krz88fbv14wssd5ty2r0k3xs,imgname-2-1779165314427.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ನೈಋತ್ಯ ರೈಲ್ವೆಯ ತಿರುವನಂತಪುರಂ ವಿಭಾಗದಲ್ಲಿ ವಿವಿಧ ದಿನಗಳಲ್ಲಿ ಹಳಿ ನಿರ್ವಹಣಾ ಕಾರ್ಯಗಳಿಗೆ ಅನುಕೂಲವಾಗುವಂತೆ, ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್&zwnj;ನಿಂದ ಮೇ 20ರಂದು ಹೊರಡುವ ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ - ವಿಜಯಪುರ ಎಕ್ಸ್&zwnj;ಪ್ರೆಸ್ ಪ್ರಯಾಣವನ್ನು ಬಾಗಲಕೋಟೆಯಲ್ಲಿ ಅಲ್ಪಾವಧಿಗೆ ಸ್ಥಗಿತಗೊಳಿಸಲಾಗುವುದು. ಈ ರೈಲು ಸೇವೆಯನ್ನು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.&lt;/p&gt;&lt;h2&gt;ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದು&lt;/h2&gt;&lt;p&gt;ಮೇ 21 ರಂದು ವಿಜಯಪುರದಿಂದ ಹೊರಡುವ ರೈಲು ಸಂಖ್ಯೆ 17377 ವಿಜಯಪುರ - ಮಂಗಳೂರು ಸೆಂಟ್ರಲ್ ಎಕ್ಸ್&zwnj;ಪ್ರೆಸ್ ಪ್ರಯಾಣವು ಸಂಜೆ 5ಗಂಟೆಗೆ ಬಾಗಲಕೋಟೆಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಈ ರೈಲು ಸೇವೆಯನ್ನು ವಿಜಯಪುರ ಮತ್ತು ಬಾಗಲಕೋಟೆ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.&lt;/p&gt;&lt;p&gt;ತಿರುವನಂತಪುರಂ ಉತ್ತರದಿಂದ ಮೇ 28 ಮತ್ತು 30ರಂದು ಹೊರಡುವ ರೈಲು ಸಂಖ್ಯೆ 16355 ತಿರುವನಂತಪುರಂ ಉತ್ತರ - ಮಂಗಳೂರು ಜಂಕ್ಷನ್ ಅಂತ್ಯೋದಯ ಎಕ್ಸ್&zwnj;ಪ್ರೆಸ್ ಅನ್ನು ಆಲಪ್ಪುಳ ಮತ್ತು ಎರ್ನಾಕುಲಂ ಜಂಕ್ಷನ್&zwnj;ನಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಚೆಂಗನ್ನೂರು, ಕೊಟ್ಟಾಯಂ ಮತ್ತು ಎರ್ನಾಕುಲಂ ಪಟ್ಟಣದಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;h2&gt;ಮಾವೇಲಿ ಎಕ್ಸ್&zwnj;ಪ್ರೆಸ್ ರೈಲು&lt;/h2&gt;&lt;p&gt;ಮೇ 29 ರಂದು ಹೊರಡುವ ಮಂಗಳೂರು ಸೆಂಟ್ರಲ್ - ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್&zwnj;ಪ್ರೆಸ್ ರೈಲು, ಆಲಪ್ಪುಳ, ಅಂಬಲಪ್ಪುಳ ಮತ್ತು ಹರಿಪಾಡ್&zwnj;ನಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಶ್ಶೇರಿ, ತಿರುವಲ್ಲಾ ಮತ್ತು ಚೆಂಗನ್ನೂರ್&zwnj;ನಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;p&gt;ಮೇ 29 ರಂದು ಹೊರಡುವ ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಿಂದ ವಾರಕ್ಕೆ ಎರಡು ಬಾರಿ ಪ್ರಯಾಣಿಸುವ ರೈಲು ಸಂಖ್ಯೆ 22207 ಡಾ.ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಸೂಪರ್&zwnj;ಫಾಸ್ಟ್ ಎಕ್ಸ್&zwnj;ಪ್ರೆಸ್ ಅನ್ನು ಎರ್ನಾಕುಲಂ ಜಂಕ್ಷನ್ ಮತ್ತು ಆಲಪ್ಪುಳದಲ್ಲಿ ನಿಲುಗಡೆಗಳನ್ನು ಬಿಟ್ಟು ಕೊಟ್ಟಾಯಂ ಮೂಲಕ ಓಡಿಸಲಾಗುತ್ತದೆ. ಎರ್ನಾಕುಲಂ ಟೌನ್, ಕೊಟ್ಟಾಯಂ ಮತ್ತು ಚೆಂಗನ್ನೂರಿನಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗುತ್ತದೆ.&lt;/p&gt;&lt;h2&gt;40 ನಿಮಿಷಗಳ ಕಾಲ ನಿರ್ಬಂಧ&lt;/h2&gt;&lt;p&gt;ಮಂಗಳೂರು ಸೆಂಟ್ರಲ್ ನಿಂದ ಮೇ 27, 28, 30 ಮತ್ತು ಜೂನ್ 1, 2ರಂದು ಹೊರಡುವ ರೈಲು ಸಂಖ್ಯೆ 16603 ಮಂಗಳೂರು ಸೆಂಟ್ರಲ್ - ತಿರುವನಂತಪುರಂ ಸೆಂಟ್ರಲ್ ಮಾವೇಲಿ ಎಕ್ಸ್&zwnj;ಪ್ರೆಸ್, ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿರ್ಬಂಧಿಸಲಾಗುತ್ತದೆ.&lt;/p&gt;&lt;p&gt;ರೈಲು ಸಂಖ್ಯೆ 16356 ಮಂಗಳೂರು ಜಂಕ್ಷನ್ - ತಿರುವನಂತಪುರಂ ಉತ್ತರ ಎರಡು ವಾರಗಳ ಅಂತ್ಯೋದಯ ಎಕ್ಸ್&zwnj;ಪ್ರೆಸ್, ಮೇ 29ರಂದು ಮಂಗಳೂರು ಜಂಕ್ಷನ್&zwnj;ನಿಂದ ಪ್ರಾರಂಭವಾಗಲಿದ್ದು, ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿರ್ಬಂಧಿಸಲಾಗುವುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/state/mangaluru-train-service-changes-and-diversions-important-update-for-passengers-gdp/articleshow-crgr4np"/>
        </item>
        <item>
            <title><![CDATA[ರೈಲು ಪ್ರಯಾಣಿಕರೇ ಗಮನಿಸಿ: ಜೂನ್ 1ರಿಂದ ಕಲಬುರಗಿ, ಗಾಣಗಾಪುರ ಮಾರ್ಗದ ಪ್ರಮುಖ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ!]]></title>
            <link>https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao</link>
            <guid isPermaLink="true">https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao</guid>
            <pubDate>Sat, 30 May 2026 19:39:57 +0530</pubDate>
            <description><![CDATA[ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಕಲಬುರಗಿ, ಗಾಣಗಾಪುರ ರಸ್ತೆ, ಮತ್ತು ಹೊಟ್ಲಿ ನಿಲ್ದಾಣಗಳ ಮೂಲಕ ಹಾದುಹೋಗುವ ಕೆಲವು ಪ್ರಮುಖ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಹೊಸ ವೇಳಾಪಟ್ಟಿಯು ಜೂನ್ 1 ರಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ನವೀಕೃತ ಸಮಯವನ್ನು ಪರಿಶೀಲಿಸಲು ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knzr06zeea1hqff78krd0yts,imgname-indian-railways-2026-reforms-vande-bharat-sleeper-hydrogen-train-ticket-refund-cancellation-board-change-policy-2-1775960595438.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಲಬುರಗಿ: &lt;/strong&gt;ರೈಲು ಪ್ರಯಾಣಿಕರ ಅನುಕೂಲತೆ, ಕಟ್ಟುನಿಟ್ಟಿನ ಸಮಯಪಾಲನೆ ಹಾಗೂ ರೈಲು ಕಾರ್ಯಾಚರಣೆಯ ಒಟ್ಟಾರೆ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಈ ವಲಯದ ವ್ಯಾಪ್ತಿಗೆ ಬರುವ ಕಲಬುರಗಿ, ಗಾಣಗಾಪುರ ರಸ್ತೆ ಹಾಗೂ ಹೊಟ್ಲಿ ರೈಲು ನಿಲ್ದಾಣಗಳ ಮಾರ್ಗವಾಗಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್&zwnj;ಪ್ರೆಸ್ ಮತ್ತು ಸಾಪ್ತಾಹಿಕ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;p&gt;ಈ ನೂತನ ಪರಿಷ್ಕೃತ ವೇಳಾಪಟ್ಟಿಯು ಜೂನ್ 1ರಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಈ ಕೆಳಗಿನ ಬದಲಾವಣೆಗಳನ್ನು ಕಡ್ಡಾಯವಾಗಿ ಗಮನಿಸಬೇಕಿದೆ.&lt;/p&gt;&lt;h2&gt;ನಿಲ್ದಾಣವಾರು ಪರಿಷ್ಕೃತ ವೇಳಾಪಟ್ಟಿಯ ಸಂಪೂರ್ಣ ವಿವರಗಳು:&lt;/h2&gt;&lt;p&gt;ವಿವಿಧ ರೈಲು ನಿಲ್ದಾಣಗಳಲ್ಲಿ ರೈಲುಗಳ ಆಗಮನ (Arrival) ಮತ್ತು ನಿರ್ಗಮನ (Departure) ಸಮಯವನ್ನು ಬದಲಾಯಿಸಲಾಗಿದ್ದು, ಅದರ ಅಧಿಕೃತ ಮಾಹಿತಿ ಇಲ್ಲಿದೆ.&lt;/p&gt;&lt;h3&gt;1. ಹೊಟ್ಲಿ ರೈಲು ನಿಲ್ದಾಣ (Hotgi Station)&lt;/h3&gt;&lt;p&gt;ಬಾಗಲಕೋಟೆ - ಮೈಸೂರು ಬಸವ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 17308): ಈ ರೈಲಿನ ಸಂಚಾರ ಸಮಯವನ್ನು 10 ನಿಮಿಷಗಳಷ್ಟು ಮುಂಚಿತಗೊಳಿಸಲಾಗಿದೆ. ಜೂನ್ 1ರಿಂದ ಅನ್ವಯವಾಗುವಂತೆ ಈ ರೈಲು ಸಂಜೆ 6:18ಕ್ಕೆ ಹೊಟ್ಲಿ ನಿಲ್ದಾಣಕ್ಕೆ ಆಗಮಿಸಿ, 6:20ಕ್ಕೆ ಮೈಸೂರಿನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರಿಸಲಿದೆ.&lt;/p&gt;&lt;h3&gt;2. ಗಾಣಗಾಪುರ ರಸ್ತೆ ನಿಲ್ದಾಣ (Ganagapur Road Station)&lt;/h3&gt;&lt;p&gt;ಹೈದರಾಬಾದ್ - ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 17050): ದತ್ತಾತ್ರೇಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಪ್ರಮುಖವಾಗಿರುವ ಈ ರೈಲಿನ ಸಮಯದಲ್ಲೂ ಮಾರ್ಪಾಡು ಮಾಡಲಾಗಿದೆ. ಜೂನ್ 1ರಿಂದ ಈ ರೈಲು ರಾತ್ರಿ 8:28ಕ್ಕೆ ನಿಲ್ದಾಣಕ್ಕೆ ಆಗಮಿಸಲಿದ್ದು, ರಾತ್ರಿ 8:30ಕ್ಕೆ ಹುಬ್ಬಳ್ಳಿಯ ಕಡೆಗೆ ಹೊರಡಲಿದೆ.&lt;/p&gt;&lt;h3&gt;3. ಕಲಬುರಗಿ ರೈಲು ನಿಲ್ದಾಣ (Kalaburagi Junction)&lt;/h3&gt;&lt;p&gt;ಕಲಬುರಗಿ ನಿಲ್ದಾಣದ ಮೂಲಕ ಹಾದುಹೋಗುವ ಹಲವು ದೂರಪ್ರಯಾಣದ ಮತ್ತು ಸಾಪ್ತಾಹಿಕ ಪ್ರೀಮಿಯಂ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ:&lt;/p&gt;&lt;ul&gt; &lt;li&gt;ಚೆನ್ನೈ ಸೆಂಟ್ರಲ್ - ಸಿಎಸ್&zwnj;ಎಂಟಿ ಮುಂಬೈ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22160): ಜೂನ್ 1ರಿಂದ ಅನ್ವಯವಾಗುವಂತೆ ಈ ರೈಲು ಮಧ್ಯರಾತ್ರಿ ನಂತರ 1:50ಕ್ಕೆ ಕಲಬುರಗಿ ನಿಲ್ದಾಣಕ್ಕೆ ಆಗಮಿಸಿ, 1:53ಕ್ಕೆ ಮುಂಬೈ ಕಡೆಗೆ ಹೊರಡಲಿದೆ.&lt;/li&gt; &lt;li&gt;ಚೆನ್ನೈ ಸೆಂಟ್ರಲ್ - ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22601): ಈ ಸಾಪ್ತಾಹಿಕ ರೈಲಿನ ಹೊಸ ಸಮಯವು ಜೂನ್ 3 ರಿಂದ ಜಾರಿಗೆ ಬರಲಿದ್ದು, ರಾತ್ರಿ 1:45ಕ್ಕೆ ನಿಲ್ದಾಣಕ್ಕೆ ಬಂದು 1:48ಕ್ಕೆ ನಿರ್ಗಮಿಸಲಿದೆ.&lt;/li&gt; &lt;li&gt;ಯಶವಂತಪುರ - ಜೈಪುರ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 20667): ಈ ರೈಲಿನ ಪರಿಷ್ಕೃತ ಸಮಯವು ಜೂನ್ 4 ರಿಂದ ಜಾರಿಗೆ ಬರಲಿದ್ದು, ರಾತ್ರಿ 1:45ಕ್ಕೆ ಕಲಬುರಗಿಗೆ ಆಗಮಿಸಿ, 1:48ಕ್ಕೆ ಜೈಪುರದ ಕಡೆಗೆ ಸಂಚರಿಸಲಿದೆ.&lt;/li&gt; &lt;li&gt;ಯಶವಂತಪುರ - ಅಹಮದಾಬಾದ್ ಸಾಪ್ತಾಹಿಕ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 22690): ಈ ರೈಲಿನ ವೇಳಾಪಟ್ಟಿಯು ಜೂನ್ 7 ರಿಂದ ಬದಲಾಗಲಿದ್ದು, ರಾತ್ರಿ 1:45ಕ್ಕೆ ನಿಲ್ದಾಣಕ್ಕೆ ಬಂದು 1:48ಕ್ಕೆ ಅಹಮದಾಬಾದ್ ಕಡೆಗೆ ತನ್ನ ಪ್ರಯಾಣ ಮುಂದುವರಿಸಲಿದೆ.&lt;/li&gt;&lt;/ul&gt;&lt;h2&gt;ಇತರೆ ನಿಲ್ದಾಣಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ ಇಲಾಖೆ ಸ್ಪಷ್ಟನೆ&lt;/h2&gt;&lt;p&gt;ಈ ನಿರ್ದಿಷ್ಟ ರೈಲುಗಳ ವೇಳಾಪಟ್ಟಿಯು ಕೇವಲ ಸೂಚಿಸಲಾದ ನಿಲ್ದಾಣಗಳಲ್ಲಿ ಮಾತ್ರ ಬದಲಾಗಲಿದ್ದು, ಉಳಿದ ಯಾವುದೇ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ ಎಂದು ಸೋಲಾಪುರ ವಿಭಾಗದ ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ಪ್ರಯಾಣಿಕರಿಗೆ ಪ್ರಮುಖ ಸಲಹೆ&lt;/h2&gt;&lt;p&gt;ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯದಲ್ಲಿ ನಿಮಿಷಗಳ ವ್ಯತ್ಯಾಸವಿರುವುದರಿಂದ ಪ್ರಯಾಣಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ನಿಲ್ದಾಣಕ್ಕೆ ಹೊರಡುವ ಮುನ್ನ ಅಧಿಕೃತ ರೈಲ್ವೆ ಮಾಹಿತಿ ಕೇಂದ್ರಗಳ ಮೂಲಕ ಅಥವಾ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (NTES) ಮೊಬೈಲ್ ಆ್ಯಪ್ ಹಾಗೂ ಐಆರ್&zwnj;ಸಿಟಿಸಿ (IRCTC) ಪೋರ್ಟಲ್ ಮೂಲಕ ರೈಲುಗಳ ನವೀಕೃತ ವೇಳಾಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ವಿನಂತಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-railways-solapur-division-revises-train-timetables-at-kalaburagi-ganagapur-road-hotgi-stations-from-june1-gdp/articleshow-dx152ao"/>
        </item>
        <item>
            <title><![CDATA[ವಿಜಯನಗರ: ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತೆಯ ಮೇಲೆ ಅತ್ಯಾ*ಚಾರವೆಸಗಿದ  ಆಸ್ಪತ್ರೆ  ನೌಕರ!]]></title>
            <link>https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</link>
            <guid isPermaLink="true">https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132</guid>
            <pubDate>Sat, 09 May 2026 09:59:34 +0530</pubDate>
            <description><![CDATA[ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ, ಗ್ರೂಪ್ &lsquo;ಡಿ&rsquo; ನೌಕರನೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ನಂಬಿಸಿ, ಕ್ವಾರ್ಟರ್ಸ್&zwnj;ಗೆ ಕರೆದೊಯ್ದು ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr5fw7c89a7qp4hbqykppja9,imgname-vijayanagara-hospital-assault-case-1778300886406.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ &lt;/strong&gt;ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರ&lt;/h2&gt;&lt;p&gt;ಆರೋಪಿಯು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ &lsquo;ಡಿ&rsquo; ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್&zwnj;ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;ಪೋಕ್ಸೋ ಅಡಿ ಪ್ರಕರಣ ದಾಖಲು&lt;/h2&gt;&lt;p&gt;ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.&lt;/p&gt;&lt;p&gt;ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಗೆ ಅಗತ್ಯ ಚಿಕಿತ್ಸೆ ಹಾಗೂ ಮನೋವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-horror-minor-girl-allegedly-assaulted-by-government-hospital-staff-in-vijayanagara-gdp/articleshow-e9qx132"/>
        </item>
        <item>
            <title><![CDATA[ಕಣ್ಮರೆಯಾದ ಹುಬ್ಬಳ್ಳಿ-ಬಾದಾಮಿ-ಗುಳೇದಗುಡ್ಡ-ಇಳಕಲ್‌ ತಲುಪವ ಬಸ್; ಪ್ರಯಾಣಿಕರ ಪರದಾಟ]]></title>
            <link>https://kannada.asianetnews.com/karnataka-districts/last-bus-service-from-hubballi-to-ilakal-from-guledagudda-depot-has-been-suspended-for-two-months-mrq/articleshow-fu1dgnx</link>
            <guid isPermaLink="true">https://kannada.asianetnews.com/karnataka-districts/last-bus-service-from-hubballi-to-ilakal-from-guledagudda-depot-has-been-suspended-for-two-months-mrq/articleshow-fu1dgnx</guid>
            <pubDate>Tue, 26 May 2026 20:03:23 +0530</pubDate>
            <description><![CDATA[ಹುಬ್ಬಳ್ಳಿಯಿಂದ ಇಳಕಲ್&zwnj;ಗೆ ರಾತ್ರಿ ಸಂಚರಿಸುತ್ತಿದ್ದ ಗುಳೇದಗುಡ್ಡ ಡಿಪೋದ ಕೊನೆಯ ಬಸ್ ಸಂಚಾರವನ್ನು ಎರಡು ತಿಂಗಳಿಂದ ಕಾರಣವಿಲ್ಲದೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ, ವಿಶೇಷವಾಗಿ ವ್ಯಾಪಾರಸ್ಥರು ಮತ್ತು ತಡವಾಗಿ ಪ್ರಯಾಣಿಸುವವರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬಸ್ ಸೇವೆಯನ್ನು ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksjana05660zvr2vcx5f2f0r,imgname-guleaddagudda-bus-stand--1779805366277.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಹುಬ್ಬಳ್ಳಿಯಿಂದ ಇಳಕಲ್ಲಗೆ ರಾತ್ರಿ ಸಂಚರಿಸುತ್ತಿದ್ದ ಗುಳೇದಗುಡ್ಡ ಡಿಪೋದ ಕೊನೆಯ ಬಸ್ ಸಂಚಾರ ಬಂದ್ ಮಾಡಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹಲವು ವರ್ಷಗಳಿಂದ ಸಂಚರಿಸುತ್ತಿದ್ದ ಹುಬ್ಬಳ್ಳಿ-ಇಳಕಲ್ಲ ಬಸ್ ಎರಡು ತಿಂಗಳಿಂದ ಕಾರಣವಿಲ್ಲದೇ ಬಂದ್ ಮಾಡಿದ್ದಾರೆ. ಇದರಿಂದ ಕೆಲಸ ಮುಗಿಸಿಕೊಂಡು ತಡವಾಗಿ ಬರುತ್ತಿದ್ದ ಹಲವು ಪ್ರಯಾಣಿಕರಿಗೆ ತೊಂದರೆಯಾಗಿದೆ. ಬಸ್ ಪುನಃ ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಕೇಳಿದರೆ ಯಾರೊಬ್ಬರೂ ಸರಿಯಾದ ಉತ್ತರ ಕೊಡುತ್ತಿಲ್ಲ ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಬಸ್ ಸಮಯ ಈ ರೀತಿಯಾಗಿತ್ತು!&lt;/strong&gt;&lt;/h2&gt;&lt;p&gt;ಗುಳೇದಗುಡ್ಡ ಡಿಪೋದಿಂದ ಹೊರಡುವ ಬಸ್ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ತಲುಪಿ ರಾತ್ರಿ 8 ಗಂಟೆಗೆ ಹುಬ್ಬಳ್ಳಿಯಿಂದ ರಾತ್ರಿ 11.30ಕ್ಕೆ ಗುಳೇದಗುಡ್ಡಕ್ಕೆ ತಲುಪಿ, ಮುಂದೆ ಇಳಕಲ್ ಗೆ ತೆರಳುತ್ತಿತ್ತು. ಹುಬ್ಬಳ್ಳಿ ಮಾರ್ಗದ ಈ ಬಸ್ ನಿಂದ ಇಳಕಲ್ಲ ನಗರದಿಂದ ಬಾದಾಮಿ ಮಾರ್ಗದವರಿಗೆ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಿತ್ತು. ಅದರಲ್ಲೂ ಇಳಕಲ್ಲ, ಗುಳೇದಗುಡ್ಡ ಪಟ್ಟಣಗಳ ವ್ಯಾಪಾರಸ್ಥರಿಗೆ ರಾತ್ರಿ ಸಮಯದಲ್ಲಿ ಬರಲು ಸಹಾಯಕವಾಗಿತ್ತು. ಆದರೆ, ಬಸ್ ಬಂದ್ ಮಾಡಿದ್ದರ ಪರಿಣಾಮ ವ್ಯಾಪಾರಸ್ಥರು, ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.&lt;/p&gt;&lt;p&gt;ಬಸ್ ಬಂದ್ ಮಾಡಿದ್ದರಿಂದ ಹುಬ್ಬಳ್ಳಿ ಘಟಕದಿಂದ ಬಸ್ ಓಡಿಸಲು ಆರಂಭಿಸಲಾಯಿತು. ಆದರೆ, ಇಳಕಲ್ಲ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಇಳಕಲ್ಲದಿಂದ ವಾಪಸ್ ತೆರಳಲು ಸಮಯ ನೀಡದ ಕಾರಣ ಆ ಬಸ್ ಸಹ ಸ್ಥಗಿತಗೊಳಿಸಲಾಗಿದೆ. ಕೂಡಲೇ ಅಧಿಕಾರಿಗಳು ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆ ಬರುತ್ತಿದ್ದ ಬಸ್ ಪುನಃ ಆರಂಭಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳು ಹೇಳಿದ್ದೇನು? ಸಾರ್ವಜನಿಕರ ಒತ್ತಾಯ ಏನು?&lt;/strong&gt;&lt;/h3&gt;&lt;p&gt;ಈ ಬಗ್ಗೆ ಸಾರಿಗೆ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ದೂರವಾಣಿ ಮೂಲಕ ಕೇಳಿದಾಗ, ಹುಬ್ಬಳ್ಳಿ ಮಾರ್ಗದ ಬಸ್ ಬಂದ್ ಆಗಿರುವ ಬಗ್ಗೆ ಜಿಟಿಒ ಅವರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಾಗಲಕೋಟೆ: ಭ್ರೂಣಲಿಂಗ ಪತ್ತೆ, ಗರ್ಭಿಣಿ ಸಾವು ಪ್ರಕರಣ, ದೆಹಲಿ ವಿಶೇಷ ಅಧಿಕಾರಿಗಳ ತಂಡದಿಂದ ದಾಳಿ&lt;/strong&gt;&lt;/p&gt;&lt;p&gt;ಗುಳೇದಗುಡ್ಡದಿಂದ ಹುಬ್ಬಳ್ಳಿಗೆ ರಾತ್ರಿ ಸಂಚರಿಸುತ್ತಿದ್ದ ಬಸ್ ನಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿತ್ತು. ಆದರೆ, ಅದನ್ನು ಬಂದ್ ಮಾಡಿದ್ದು ಸರಿಯಲ್ಲ. ಇದರಿಂದ ವ್ಯಾಪಾರಸ್ಥರಿಗೆ ತೊಂದರೆಯಾಗಿದ್ದು, ಕೂಡಲೇ ಈ ರೂಟ್ ಬಸ್ ಆರಂಭಿಸಬೇಕು ಎಂದು ಗುಳೇದಗುಡ್ಡ ನಗರ ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ಅಶೋಕ ಹೆಗಡೆ ಒತ್ತಾಯಿಸಿದ್ದಾರೆ.&lt;/p&gt;&lt;p&gt;ಹುಬ್ಬಳ್ಳಿಯಿಂದ ರಾತ್ರಿ ಬರುತ್ತಿದ್ದ ಬಸ್ ನಿಂದ ವ್ಯಾಪಾರಸ್ಥರಿಗೆ, ದೂರು ಊರುಗಳಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಅನುಕೂಲವಾಗಿತ್ತು. ಅದನ್ನು ಬಂದ್ ಮಾಡಿದ್ದರಿಂದ ವ್ಯಾಪಾರಸ್ಪರಿಗೆ ತೊಂದರೆಯಾಗಿದ್ದು, ಅಧಿಕಾರಿಗಳು ಪುನಃ ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಬಸ್ ಆರಂಭಿಸಬೇಕು ಪುರಸಭೆ ಮಾಜಿ ಉಪಾಧ್ಯಕ್ಷರಾದ ಶ್ರೀಕಾಂತ ಹುನಗುಂದ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;100 ವರ್ಷದಿಂದ ಸಿಗದ ಮನೆ ಅಡಿಸ್ಥಳದ ಹಕ್ಕು ಪತ್ರ: 16 ಕುಟುಂಬ, ಮೂರು ತಲೆಮಾರಿನ ಹೋರಾಟ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/last-bus-service-from-hubballi-to-ilakal-from-guledagudda-depot-has-been-suspended-for-two-months-mrq/articleshow-fu1dgnx"/>
        </item>
        <item>
            <title><![CDATA[ಬಾದಾಮಿ ಗುಹಾಂತರ ದೇವಾಲಯದ ಒಳಗೆ ಚಪ್ಪಲಿ ಧರಿಸಿ ಬಂದ ಮುಸ್ಲಿಂ ಮಹಿಳೆ, ತರಾಟೆ ತೆಗೆದುಕೊಂಡ ಟೂರಿಸ್ಟ್‌!]]></title>
            <link>https://kannada.asianetnews.com/karnataka-districts/badami-cave-temple-viral-video-tourist-hijab-woman-footwear-asi-karnataka-news-san/articleshow-gwwz3xr</link>
            <guid isPermaLink="true">https://kannada.asianetnews.com/karnataka-districts/badami-cave-temple-viral-video-tourist-hijab-woman-footwear-asi-karnataka-news-san/articleshow-gwwz3xr</guid>
            <pubDate>Tue, 19 May 2026 18:17:39 +0530</pubDate>
            <description><![CDATA[&lt;p&gt;ಬಾಗಲಕೋಟೆಯ ಪ್ರಸಿದ್ಧ ಬಾದಾಮಿ ಗುಹಾಂತರ ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿದ್ದ ಮುಸ್ಲಿಂ ಮಹಿಳೆಯನ್ನು ಇನ್ನೊಬ್ಬ ಮಹಿಳಾ ಪ್ರವಾಸಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಇಬ್ಬರ ನಡುವಿನ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks0478yjgf1frd9px46fd7zc,imgname-badami-cave-temple-1779194635218.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮೇ.19):&lt;/strong&gt; ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಮತ್ತು ಧಾರ್ಮಿಕ ಪರಂಪರೆಯ ತಾಣವಾಗಿರುವ ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹಾಂತರ ದೇವಾಲಯದ (Badami Cave Temples) ಆವರಣದಲ್ಲಿ ತೀವ್ರ ಹೈಡ್ರಾಮಾ ನಡೆದಿದೆ. ಪವಿತ್ರ ದೇವಾಲಯದ ಸಂಕೀರ್ಣದ ಒಳಗೆ ಚಪ್ಪಲಿ ಧರಿಸಿ ಓಡಾಡುತ್ತಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಮಹಿಳಾ ಟೂರಿಸ್ಟ್&zwnj; ಒಬ್ಬರು ಸ್ಥಳದಲ್ಲೇ ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಇಬ್ಬರು ಮಹಿಳೆಯರ ನಡುವೆ ನಡೆದ ತೀವ್ರ ವಾಗ್ವಾದದ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.&lt;/p&gt;&lt;p&gt;ಎಕ್ಸ್&zwnj;ನಲ್ಲಿ'@gharkekalesh' ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಇದು ಇಂಟರ್ನೆಟ್&zwnj;ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿ, ಹಸಿರು ಬಣ್ಣದ ಉಡುಪು ಮತ್ತು ಹಿಜಾಬ್ ಧರಿಸಿರುವ ಮಹಿಳೆಯ ಜೊತೆ ಮಹಿಳಾ ಪ್ರವಾಸಿಗರೊಬ್ಬರು ತೀವ್ರವಾಗಿ ಜಗಳವಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಪಾರಂಪರಿಕ ತಾಣ ಹಾಗೂ ಪವಿತ್ರ ದೇವಸ್ಥಾನದ ಒಳಗೆ ಚಪ್ಪಲಿ ಧರಿಸಿ ನಿಯಮ ಉಲ್ಲಂಘಿಸಿರುವುದನ್ನು ಕಂಡು ಆ ಪ್ರವಾಸಿಗ ಮಹಿಳೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;h2&gt;&lt;strong&gt;'ನಾನು ಇಲ್ಲಿನ ಸ್ಟಾಫ್' ಎಂದ ಮಹಿಳೆ; ಪ್ರವಾಸಿಗಳ ಆರೋಪ&lt;/strong&gt;&lt;/h2&gt;&lt;p&gt;ಆಕ್ಷೇಪ ಎತ್ತಿದ ಮಹಿಳಾ ಪ್ರವಾಸಿಗರು, ಚಪ್ಪಲಿ ಧರಿಸಿದ್ದ ಮಹಿಳೆಯ ಹೆಸರು 'ರೋಷ್ನಿ ಮುಸ್ತಾಫಿ' ಎಂದು ಹೇಳಿದ್ದಾರೆ. ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವುದನ್ನು ಪ್ರಶ್ನಿಸಿದಾಗ, ಆ ರೋಷ್ನಿ ಎಂಬಾಕೆ ತಾನು ಅಲ್ಲಿನ ಸಿಬ್ಬಂದಿ ಎಂದು ಹೇಳಿದ್ದಾಳೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ನೀವು ಸಿಬ್ಬಂದಿ ಆಗಿದ್ದರೆ, ದೇವಸ್ಥಾನದ ಒಳಗೆ ಚಪ್ಪಲಿ ಧರಿಸಿ ಓಡಾಡಬಹುದೇ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.&lt;/p&gt;&lt;p&gt;ಆದರೆ, ಈ ವೈರಲ್ ವಿಡಿಯೋ ಹಾಗೂ ಘಟನೆಗೆ ಸಂಬಂಧಿಸಿದಂತೆ ಈ ವರದಿ ಪ್ರಕಟವಾಗುವವರೆಗೂ ಇತಿಹಾಸ ಪ್ರಸಿದ್ಧ ಸ್ಮಾರಕಗಳ ಉಸ್ತುವಾರಿ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI - Archaeological Survey of India) ಯಾವುದೇ ಅಧಿಕೃತ ಪ್ರತಿಕ್ರಿಯೆ ಅಥವಾ ಸ್ಪಷ್ಟೀಕರಣವನ್ನು ನೀಡಿಲ್ಲ.&lt;/p&gt;&lt;h2&gt;&lt;strong&gt;ಟ್ವಿಟರ್&zwnj;ನಲ್ಲಿ ಜನಾಕ್ರೋಶ; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ&lt;/strong&gt;&lt;/h2&gt;&lt;p&gt;ಈ ವಿಡಿಯೋ ಎಕ್ಸ್ (ಟ್ವಿಟರ್) ಜಾಲತಾಣದಲ್ಲಿ ಅಪ್&zwnj;ಲೋಡ್ ಆದ ಬೆನ್ನಲ್ಲೇ ಸಾರ್ವಜನಿಕರಿಂದ ಕಮೆಂಟ್&zwnj;ಗಳು ಹರಿದು ಬರುತ್ತಿವೆ. ಒಬ್ಬ ಯೂಸರ್&zwnj; ಆಕ್ರೋಶ ವ್ಯಕ್ತಪಡಿಸಿ, &quot;ಇದೇನು ನಿಮಗೊಂದು ನಿಯಮ, ಬೇರೆಯವರಿಗೊಂದು ನಿಯಮವೇ? ಇದು ಬರೀ ಸಾರ್ವಜನಿಕ ಕಾರಿಡಾರ್ ಅಲ್ಲ, ಇದು 6 ನೇ ಶತಮಾನದ ಭವ್ಯ ಹಿಂದೂ ದೇವಾಲಯದ ಪವಿತ್ರ ತಾಣ. ನೀವು ಎಎಸ್&zwnj;ಐ (ASI) ಸಿಬ್ಬಂದಿಯೇ ಆಗಿದ್ದರೂ ಸಹ, ಪ್ರತಿಯೊಬ್ಬ ಭಕ್ತ ಹಾಗೂ ಪ್ರವಾಸಿಗರಿಂದ ನಿರೀಕ್ಷಿಸುವ ಕನಿಷ್ಠ ಗೌರವ ಮತ್ತು ಸೌಜನ್ಯವನ್ನು ನೀವೂ ಪಾಲಿಸಬೇಕು ಹಾಗೂ ಚಪ್ಪಲಿಗಳನ್ನು ಹೊರಗಿಡಬೇಕು. ಕೇವಲ ಫೋನ್ ಕಾಲ್&zwnj;ಗಳು ನಿಮ್ಮನ್ನು ಈ ಮೂಲಭೂತ ನಿಯಮದಿಂದ ಮುಕ್ತಗೊಳಿಸುವುದಿಲ್ಲ. ಧರ್ಮದ ಪಾವಿತ್ರ್ಯತೆ ಪರವಾಗಿ ಧ್ವನಿ ಎತ್ತಿದ ಮಹಿಳಾ ಟೂರಿಸ್ಟ್&zwnj;ನ ಬಗ್ಗೆ ಹೆಮ್ಮೆಯಿದೆ&quot; ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;ಆದರೆ, ಮತ್ತೊಬ್ಬ ಮಹಿಳೆ ಸಿಬ್ಬಂದಿ ಪರವಾಗಿ ಬ್ಯಾಟ್ ಬೀಸಿದ್ದು, &quot;ಅಷ್ಟಕ್ಕೂ ಯಾಕೆ ಇಷ್ಟೊಂದು ಗಲಾಟೆ? ಬಿಸಿಲ ಧಗೆಯಿಂದ ಆಕೆಯ ಪಾದಗಳನ್ನು ರಕ್ಷಿಸಲು ನೀವು ಹೋಗುತ್ತೀರಾ?&quot; ಎಂದು ಪ್ರಶ್ನಿಸಿದ್ದಾರೆ.&lt;/p&gt;&lt;h2&gt;&lt;strong&gt;ಬಾದಾಮಿ ನಿರ್ವಹಣೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರವಾಸಿಗರು&lt;/strong&gt;&lt;/h2&gt;&lt;p&gt;ಇದೇ ವೇಳೆ ಬಾದಾಮಿ ಮತ್ತು ಭೂತನಾಥ ದೇವಾಲಯದ ಕಳಪೆ ನಿರ್ವಹಣೆಯ ಬಗ್ಗೆಯೂ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಬ್ಬ ಬಳಕೆದಾರರು ತಮ್ಮ ಹಳೆಯ ಅನುಭವವನ್ನು ಹಂಚಿಕೊಳ್ಳುತ್ತಾ, &quot;ಇಲ್ಲಿನ ಮ್ಯಾನೇಜ್&zwnj;ಮೆಂಟ್ ಅತ್ಯಂತ ಕೆಟ್ಟದಾಗಿದೆ. ನಾನು 6 ವರ್ಷಗಳ ಹಿಂದೆ ಬಾದಾಮಿ ಗುಹೆಗಳು ಮತ್ತು ಭೂತನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾಗ, ಬಹುತೇಕ ಎಲ್ಲಾ ಗುಹೆಗಳು ಹಾಗೂ ಗರ್ಭಗುಡಿಯ ಆವರಣದಲ್ಲಿ ಮೂತ್ರದ ವಾಸನೆ ಬರುತ್ತಿತ್ತು. ನಾನು ಆ ಸಮಯದಲ್ಲಿ ಈ ಬಗ್ಗೆ ದೂರನ್ನು ಸಹ ಎತ್ತಿದ್ದೆ, ಆದರೆ ಈಗೇನಾದರೂ ಬದಲಾಗಿದೆಯೇ ಎಂಬುದು ತಿಳಿಯುತ್ತಿಲ್ಲ&quot; ಎಂದು ಬೇಸರ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;Badami Caves: A lady tourist gets into a heated argument with a hijab-wearing ASI staff member (named Roshani) for walking inside the temple with slippers on. The staff is on the phone defending herself while the visitor keeps questioning her. pic.twitter.com/KnJ3sjRrSb&lt;/p&gt;&lt;p&gt;&mdash; Ghar Ke Kalesh (@gharkekalesh) May 19, 2026&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/badami-cave-temple-viral-video-tourist-hijab-woman-footwear-asi-karnataka-news-san/articleshow-gwwz3xr"/>
        </item>
        <item>
            <title><![CDATA[ಮುಧೋಳ-ನಿಪ್ಪಾಣಿ ಹೆದ್ದಾರಿ: ವರವಾಗೋ ಬದಲು ಶಾಪವಾಗಿ ಪರಿಣಮಿಸಿದ ಮಹಾಲಿಂಗಪುರದ ರಸ್ತೆ ವಿಭಜಕ]]></title>
            <link>https://kannada.asianetnews.com/karnataka-districts/bagalkot-accidents-occurred-due-to-the-lack-of-proper-signage-lights-mudhol-nippani-highway-mahalingapur-mrq/articleshow-huwpg4r</link>
            <guid isPermaLink="true">https://kannada.asianetnews.com/karnataka-districts/bagalkot-accidents-occurred-due-to-the-lack-of-proper-signage-lights-mudhol-nippani-highway-mahalingapur-mrq/articleshow-huwpg4r</guid>
            <pubDate>Mon, 25 May 2026 05:25:18 +0530</pubDate>
            <description><![CDATA[ಮಹಾಲಿಂಗಪುರದ ಮುಧೋಳ-ನಿಪ್ಪಾಣಿ ಹೆದ್ದಾರಿಯಲ್ಲಿರುವ ರಸ್ತೆ ವಿಭಜಕಕ್ಕೆ ಸೂಕ್ತ ಸೂಚನಾ ಫಲಕ ಮತ್ತು ದೀಪಗಳಿಲ್ಲದೆ ನೂರಾರು ಅಪಘಾತಗಳು ಸಂಭವಿಸಿವೆ. ಇದರಿಂದಾಗಿ ಅನೇಕರು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಜನರ ಜೀವಕ್ಕೆ ಕುತ್ತು ತಂದಿದೆ. ಇತ್ತೀಚಿನ ಅಪಘಾತದ ನಂತರ, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksdd68n8gcj8464qgqwf4djm,imgname-mahalingapur-1779640246951.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಶೇಷ ವರದಿ&lt;/strong&gt;&lt;/p&gt;&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಮಹಾಲಿಂಗಪುರ&lt;/strong&gt;&lt;/p&gt;&lt;p&gt;ಜನರಿಗೆ ವರವಾಗಬೇಕಿದ್ದ ರಸ್ತೆ ವಿಭಜಕ ಶಾಪವಾಗಿ ಪರಿಣಮಿಸಿದ್ದು, ಇದುವರೆಗೂ ನೂರಾರು ಅಪಘಾತಗಳು ಸಂಭವಿಸಿ ಸಾಕಷ್ಟು ಜನ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದರೂ ಇಲಾಖೆ ಅಧಿಕಾರಿಗಳು ಜಾಣಮೌನ ವಹಿಸಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.&lt;/p&gt;&lt;p&gt;ಮುಧೋಳದಿಂದ ರಬಕವಿ ಬನಹಟ್ಟಿ ಮುಖಾಂತರ ಸಾಂಗ್ಲಿ, ಮಿರಜ್ ಹಾಗೂ ಜಮಖಂಡಿ, ವಿಜಯಪುರ ಮತ್ತು ಗೋಕಾಕ, ಘಟಪ್ರಭಾ, ಬೆಳಗಾವಿ, ಕೊಲ್ಲಾಪುರ, ನಿಪ್ಪಾಣಿ ಕಡೆ ನಿತ್ಯವೂ ನೂರಾರು ವಾಹನಗಳು ಚಲಿಸುವ ಮುಧೋಳ-ನಿಪ್ಪಾಣಿ ಹೆದ್ದಾರಿಯಲ್ಲಿ ಸ್ಥಳೀಯ ಅಷ್ಟಗಿ ಚಿತ್ರಮಂದಿರದ ಮುಂಭಾಗದಲ್ಲಿ ಅಫೋಲೋ ಮೆಡಿಕಲ್ ಸ್ಟೋರ್ ಎದುರು ಆರಂಭವಾಗುವ ರಸ್ತೆ ವಿಭಜಕಕ್ಕೆ ಯಾವುದೇ ರೀತಿಯ ಸೂಚನಾ ಫಲಕವಾಗಲಿ, ವಿದ್ಯುತ್ ದೀಪಗಳಿಂದ ರಸ್ತೆ ವಿಭಜಕದ ತಿಳಿವಳಿಕೆಯಾಗಲಿ ಮಾಡದಿರುವುದರಿಂದ ಈ ಮಾರ್ಗದಲ್ಲಿ ಬರುವ ವಾಹನ ಸವಾರರಿಗೆ ರಸ್ತೆ ವಿಭಜಕ ಗೊತ್ತಾಗದೇ ಈವರೆಗೆ ನೂರಾರು ಟ್ರ್ಯಾಕ್ಟರ್, ಕಾರು, ಲಾರಿ, ಬೈಕ್ ಮತ್ತಿತರ ವಾಹನಗಳು ಡಿಕ್ಕಿ ಹೊಡೆದು ಸಾಕಷ್ಟು ಅವಘಡಗಳು ಸಂಭವಿಸಿವೆ.&amp;nbsp;&lt;/p&gt;&lt;h2&gt;&lt;strong&gt;ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣ&lt;/strong&gt;&lt;/h2&gt;&lt;p&gt;ಕೆಲವು ಅಪಘಾತಗಳು ಜನರ ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗಿವೆ. ಇದಕ್ಕೆ ತಾಜಾ ಉದಾಹರಣೆಯಾಗಿ ಶನಿವಾರ ರಾತ್ರಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಅಪೋಲೋ ಮೆಡಿಕಲ್ಸ್ ಪಕ್ಕದಲ್ಲಿ ಅಪ್ಪಳಿಸಿದೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ಮೆಡಿಕಲ್ ಸ್ಟೋರ್ ಒಳಗೆ ನುಗ್ಗಿ ದೊಡ್ಡ ಅನಾಹುತ ಆಗುವ ಸಂಭವವಿತ್ತು.&lt;/p&gt;&lt;p&gt;ಇಲ್ಲಿ ಎಂಎಸ್ಐಎಲ್ ಬಾರ್, ಮೆಡಿಕಲ್ ಸ್ಟೋರ್ಸ್, ಕಟಿಂಗ್ ಶಾಪ್, ಖಾನಾವಳಿಗಳು, ಬಟ್ಟೆ ಅಂಗಡಿಗಳು ಮುಂತಾದ ವ್ಯಾಪಾರ ಮಳಿಗೆಗಳಿದ್ದು, ಮಹಾಲಿಂಗಪುರದ ಮುಖ್ಯ ಮಾರುಕಟ್ಟೆಯಾದ ಜವಳಿ ಬಜಾರ್ ಗೆ ಹೋಗುವ ದಾರಿಯೂ ಇದೇ ಆಗಿರುವುದರಿಂದ ಇಲ್ಲಿ ಯಾವಾಗಲೂ ಸಾಕಷ್ಟು ಜನಸಂದಣಿ ಇರುತ್ತದೆ. ಜನರು ಕೈಯಲ್ಲಿ ಜೀವ ಹಿಡಿದು ಪ್ರಾಣಭಯದಿಂದ ಓಡಾಡುವಂತಾಗಿದೆ. ಹೀಗಿದ್ದರೂ ಇಲ್ಲಿ ರಸ್ತೆ ವಿಭಜಕ ಸೂಚನಾ ಫಲಕ ಹಾಕದೆ ಸಾಕಷ್ಟು ಅಪಘಾತಗಳು ಸಂಭವಿಸಿದ್ದು ಅದೃಷ್ಟವಶಾತ್ ಇದುವರೆಗೂ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕಬ್ಬು ಸಾಗಣೆ ಸಂದರ್ಭದಲ್ಲಿ ಸಾಕಷ್ಟು ಟ್ರ್ಯಾಕ್ಟರ್&zwnj;ಗಳು ಸಹ ಈ ವಿಭಜಕಕ್ಕೆ ಢಿಕ್ಕಿ ಹೊಡೆದಿವೆ. ಇಷ್ಟೆಲ್ಲ ಅನಾಹುತ ಸಂಭವಿಸಿದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತು ಜಾಣ ಕುರುಡುತನ ಪ್ರದರ್ಶಿಸುತ್ತ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.&lt;/p&gt;&lt;h3&gt;ಅಧಿಕಾರಿಗಳು ಏನ್ ಹೇಳ್ತಾರೆ?&lt;/h3&gt;&lt;p&gt;ಶನಿವಾರ ನಡೆದ ಅಪಘಾತಕ್ಕೆ ರಸ್ತೆ ವಿಭಜಕದ ಸೂಚನೆಗಳು ಇಲ್ಲದಿರುವುದು ಕಾರಣ ಎಂದು ಗೊತ್ತಾಗಿದ್ದು, ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಜಮಖಂಡಿಯ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹೇಳುತ್ತಾರೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkot-accidents-occurred-due-to-the-lack-of-proper-signage-lights-mudhol-nippani-highway-mahalingapur-mrq/articleshow-huwpg4r"/>
        </item>
        <item>
            <title><![CDATA[ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ: ನಾಯಕತ್ವ ಬದಲಾವಣೆ ಬಗ್ಗೆ ಸಚಿವ ತಿಮ್ಮಾಪುರ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/rb-timmapur-on-karnataka-leadership-change-congress-gvd/articleshow-myp2cwc</link>
            <guid isPermaLink="true">https://kannada.asianetnews.com/karnataka-districts/rb-timmapur-on-karnataka-leadership-change-congress-gvd/articleshow-myp2cwc</guid>
            <pubDate>Sun, 24 May 2026 17:21:13 +0530</pubDate>
            <description><![CDATA[&lt;p&gt;ಸದ್ಯಕ್ಕೆ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01heecnthg6nyj29hs5x1qr0fn,imgname-bdb.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮೇ.24):&lt;/strong&gt; ರಾಜ್ಯ ರಾಜಕಾರಣದ ಬೆಳವಣಿಗೆಗಳ ಮೇಲೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ನಿಗಾ ಇಟ್ಟಿದೆ. ಆದರೆ, ನನ್ನ ಜ್ಞಾನಕ್ಕೆ ಬಂದ ಮಟ್ಟಿಗೆ ಸದ್ಯಕ್ಕೆ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.&lt;/p&gt;&lt;p&gt;ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಯಾವ ನಿರ್ದೇಶನ ನೀಡುತ್ತಾರೋ ಅಲ್ಲಿಯವರೆಗೆ ಸದ್ಯದ ಪರಿಸ್ಥಿತಿ ಹೀಗೆಯೇ ಮುಂದುವರಿಯಲಿದೆ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧ ಎಂದು ನಮ್ಮ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಾಯಕತ್ವದ ಗೊಂದಲದಿಂದಾಗಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮುಖ್ಯಮಂತ್ರಿಗಳು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದಷ್ಟು ಬೇಗ ಹೈಕಮಾಂಡ್ ಮಧ್ಯ ಪ್ರವೇಶಿಸಿ ವದಂತಿಗಳಿಗೆ ಇತಿಶ್ರೀ ಹಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಮಂತ್ರಿ ಸ್ಥಾನ ಸಿಗದಿದ್ದರೆ ದೆಹಲಿಗೆ ಹೋಗಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂಬ ಕೆಲವು ಕಾಂಗ್ರೆಸ್ ಶಾಸಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ತಿಮ್ಮಾಪೂರ ಅವರು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಹೀಗಾಗಿ ಶಾಸಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಶಾಸಕರಾದವರು ಸಚಿವರಾಗಲು ಬಯಸುವುದು ಮತ್ತು ಅದಕ್ಕಾಗಿ ಬೇಡಿಕೆ ಇಡುವುದು ಸಹಜ. ಅದರಲ್ಲಿ ಯಾವುದೇ ತಪ್ಪಿಲ್ಲ. ಅಂತಿಮವಾಗಿ ಯಾರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ಎಲ್ಲವನ್ನೂ ಅಳೆದು ತೂಗಿ, ಸೂಕ್ತ ಲೆಕ್ಕಾಚಾರದೊಂದಿಗೆ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ತುಷ್ಟೀಕರಣ ಮಾಡುತ್ತಿರುವವರು ಬಿಜೆಪಿಯವರು&lt;/strong&gt;&lt;/p&gt;&lt;p&gt;ಕಲಬುರ್ಗಿಯ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣದ ಕೇಸ್ ಹಿಂತೆಗೆದುಕೊಂಡ ವಿಚಾರದ ಕುರಿತು ಮುಸ್ಲಿಂ ತುಷ್ಟೀಕರಣ ಎಂಬ ಬಿಜೆಪಿ ಆರೋಪಕ್ಕೆ ತಿಮ್ಮಾಪೂರ ತಿರುಗೇಟು ನೀಡಿ, ನಾವು ರೈತರ ಕೇಸ್&zwnj;ಗಳನ್ನು ವಾಪಸ್ ಪಡೆದಿದ್ದೇವಲ್ಲ. ಅದು ಕೋಮುವಾದವಾ? ಎಂಟರಿಂದ ಒಂಬತ್ತು ರೈತರ ಕೇಸ್&zwnj; ಹಿಂಪಡೆದಿದ್ದೇವೆ, ಅಲ್ಲಿ ಜಾತಿ ಧರ್ಮ ಬಂದಿತ್ತಾ? ಇದಕ್ಕೆ ಕೋಮು ಬಣ್ಣ ಹಚ್ಚೋದು ಬಿಜೆಪಿಯವರು. ತುಷ್ಟೀಕರಣ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಈ ದೇಶದ ಜನರನ್ನು ಒಗ್ಗೂಡಿಸಲು ಎಲ್ಲ ಜಾತಿ ಧರ್ಮದವರನ್ನು ಅಪ್ಪಿಕೊಂಡು ಹೋಗುತ್ತಿರುವ ಪಕ್ಷ ನಮ್ಮದು ಎಂದರು. ಬಿಜೆಪಿಗರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ದೇಶವನ್ನು ಅಧೋಗತಿಗೆ ತಂದಂತವರು ಬಿಜೆಪಿಯವರು. ಅವರಿಗೆ ಬೇರೆ ದಂದೆಯೇ ಇಲ್ಲ. ಮುಂಜಾನೆ ಎದ್ದು ಕೂಡಲೇ ಧರ್ಮದ ಹೆಸರಲ್ಲಿ ಬದುಕುವಂತವರು. ಅವರಿಗೆ ಧರ್ಮಾಭಿಮಾನವಿಲ್ಲ, ದೇಶಾಭಿಮಾನವೂ ಇಲ್ಲ ಎಂದು ಆರೋಪಿಸಿದರು&lt;/p&gt;&lt;h2&gt;&lt;strong&gt;ದೇಶದ ಮಾನ ಮರ್ಯಾದೆ ನಾರ್ವೆಯಲ್ಲಿ ಹರಾಜು&lt;/strong&gt;&lt;/h2&gt;&lt;p&gt;ನಾರ್ವೆಯಲ್ಲಿ ಪ್ರಧಾನಿಗೆ ಇಡೀ ವಿಶ್ವವೇ ಛೀಮಾರಿ ಹಾಕಿದೆ. ಮಾಧ್ಯಮವನ್ನೇ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹತ್ತಿಕ್ಕುವ ಕೆಲಸವನ್ನು ಇವರು ಮಾಡುತ್ತಿದ್ದಾರೆ. ಇದಕ್ಕಿಂತ ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತಿನ್ನೇನು ಬೇಕು. ಡಾಲರ್ ಎದುರು ರೂಪಾಯಿ ಮೌಲ್ಯ 96ಕ್ಕೆ ಬಂದಿದೆ. ಪೆಟ್ರೋಲ್, ಡೀಸೆಲ್, ಸಿಲಿಂಡರ್ ದರ ಏರುತ್ತಿದೆ. ದೇಶಗಳ ಜೊತೆ ಒಳ್ಳೆ ಸಂಬಂಧ ಇಟ್ಕೊಂಡು ಇಂತವುಗಳ ಬೆಲೆ ಕಡಿಮೆ ಮಾಡುವುದನ್ನು ಬಿಟ್ಟು. ಸಿಲಿಂಡರ್ ಬೆಲೆ ಜಾಸ್ತಿ ಆದರೆ ಊಟ ಬಿಡಿ. ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಿಗೆ ಆದರೆ ಮನೆಯಲ್ಲಿ ಕೂತುಕೊಳ್ಳಿ ಎಂದು ಈ ರೀತಿ ಮಾತುಗಳನ್ನು ದೇಶದ ಪ್ರಧಾನಿ ಹೇಳಿದ್ರೆ ಜನ ಏನಂತಾರೆ. ಯಾವ ದೇಶದ ಜೊತೆ ಇವರು ಸಂಬಂಧ ಚೆನ್ನಾಗಿ ಇಟ್ಟುಕೊಂಡಿದ್ದಾರೆ. ನಮ್ಮ ದೇಶದ ಮಾನ ಮರ್ಯಾದೆ ಎಲ್ಲವನ್ನು ನಾರ್ವೆಯಲ್ಲಿ ಹರಾಜು ಹಾಕಿದ್ದಾರೆ ಪ್ರಧಾನಿಗಳು ಎಂದು ಸಚಿವ ತಿಮ್ಮಾಪೂರ ಹೇಳಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/rb-timmapur-on-karnataka-leadership-change-congress-gvd/articleshow-myp2cwc"/>
        </item>
        <item>
            <title><![CDATA[ಅಪ್ಪನ ಸ್ಥಾನ ಉಳಿಸಿಕೊಂಡ ಉಮೇಶ್‌ ಮೇಟಿ; ಬಿಜೆಪಿಯ ಚರಂತಿಮಠ ವಿರುದ್ಧ 22332 ಮತಗಳ ಅಂತರದ ಜಯ]]></title>
            <link>https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf</link>
            <guid isPermaLink="true">https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf</guid>
            <pubDate>Tue, 05 May 2026 05:31:18 +0530</pubDate>
            <description><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqrwdb1v93amws1cr6nmvvyn,imgname----------1777877822522.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಬಹುನಿರೀಕ್ಷಿತ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ವೀರಣ್ಣ ಚರಂತಿಮಠ ವಿರುದ್ಧ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.&lt;/p&gt;&lt;p&gt;ಉಮೇಶ ಮೇಟಿ 98,919 ಮತ ಪಡೆದು ಗೆಲುವು ಸಾಧಿಸಿದರೆ, ಬಿಜೆಪಿಯ ವೀರಣ್ಣ ಚರಂತಿಮಠ 76,587 ಮತ ಪಡೆದು ಪರಾಜಯ ಹೊಂದಿದ್ದಾರೆ.&lt;/p&gt;&lt;p&gt;ಬಾಗಲಕೋಟೆಯಲ್ಲಿ ಕಾಂಗ್ರೆಸ್&zwnj;ನ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಏ.9ರಂದು ಮತದಾನ ನಡೆದಿತ್ತು. ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್&zwnj;ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಕಾಂಗ್ರೆಸ್&zwnj; ಉಮೇಶ್ ಮೇಟಿಗೆ ಟಿಕೆಟ್&zwnj; ನೀಡಿದ್ದು, ಅವರೀಗ 22,332 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, ಉಳಿದವರು ಠೇವಣಿ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.&lt;/p&gt;&lt;h2&gt;&lt;strong&gt;ಮೊದಲ ಬಾರಿಗೆ ವಿಧಾನಸಭೆಗೆ&lt;/strong&gt;&lt;/h2&gt;&lt;p&gt;ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು 22,332 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್&zwnj;ನ ಉಮೇಶ ಮೇಟಿ ಮೊದಲ ಬಾರಿಗೆ ವಿಧಾನಸಭೆಯ ಮೆಟ್ಟಿಲು ತುಳಿದಿದ್ದಾರೆ. ನವನಗರದ ತೋಟಗಾರಿಕೆ ವಿವಿಯಲ್ಲಿ ನಡೆದ ಮತ ಎಣಿಕೆಯಲ್ಲಿ ಅಭೂತಪೂರ್ವ ಗೆಲುವು ಕಂಡ ಉಮೇಶ ಮೇಟಿಗೆ ಅನುಕಂಪದ ಅಲೆ, ಜೊತೆಗೆ ಆಡಳಿತಾರೂಢ ಸರ್ಕಾರ ಜೊತೆಯಾಗಿದ್ದರಿಂದ ಈ ಗೆಲುವು ಸಾಧ್ಯವಾಗಿದೆ.&lt;/p&gt;&lt;h3&gt;&lt;strong&gt;ಧನ್ಯವಾದ ಸಲ್ಲಿಸಿದ ಉಮೇಶ್ ಮೇಟಿ&lt;/strong&gt;&lt;/h3&gt;&lt;p&gt;ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ. ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ ಎಂದು ಉಮೇಶ್ ಮೇಟಿ ಹೇಳುತ್ತಾರೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/congress-candidate-umesh-meti-wins-in-bagalkote-assembly-constituency-by-election-mrq/articleshow-q8xo8uf"/>
        </item>
        <item>
            <title><![CDATA[ಬಾಗಲಕೋಟೆ: 16 ವರ್ಷ ಪೂರ್ಣ, ಕುಡಚಿ ರೈಲು ಮಾರ್ಗ ಅಪೂರ್ಣ! ಭೂಮಿ ಕಳಕೊಂಡ ರೈತರು ಕೋರ್ಟ್ ಮುಂದೆ]]></title>
            <link>https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33</link>
            <guid isPermaLink="true">https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33</guid>
            <pubDate>Fri, 22 May 2026 11:22:02 +0530</pubDate>
            <description><![CDATA[&lt;p&gt;ವರದಿ: ಶ್ರೀನಿವಾಸ ಬಬಲಾದಿ&lt;/p&gt;&lt;p&gt;2011ರಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿಯು ಭೂಸ್ವಾಧೀನ ವಿಳಂಬ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. 142ಕಿ.ಮೀ. ಪೈಕಿ ಕೇವಲ 38ಕಿ.ಮೀ. ಪೂರ್ಣಗೊಂಡಿದ್ದು, ರೈಲು ಸಂಚಾರ ಆರಂಭವಾಗದ ಕಾರಣ ಸ್ಥಳೀಯ ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks72w4aqjtcxtm0e6zqx19ez,imgname-1--3--1779428102486.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಶ್ರೀನಿವಾಸ ಬಬಲಾದಿ&lt;/p&gt;&lt;p&gt;2011ರಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿಯು ಭೂಸ್ವಾಧೀನ ವಿಳಂಬ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. 142ಕಿ.ಮೀ. ಪೈಕಿ ಕೇವಲ 38ಕಿ.ಮೀ. ಪೂರ್ಣಗೊಂಡಿದ್ದು, ರೈಲು ಸಂಚಾರ ಆರಂಭವಾಗದ ಕಾರಣ ಸ್ಥಳೀಯ ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿವೆ.&lt;/p&gt;&lt;img&gt;&lt;p&gt;ಬಾಗಲಕೋಟೆ: ಕೇಂದ್ರ ಬಜೆಟ್&zwnj;ನಲ್ಲಿ ಘೋಷಣೆಯಾಗಿ ರಾಜ್ಯದ ಆರ್ಥಿಕ ಸಹಾಯದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ. ಬಾಗಲಕೋಟೆಯಿಂದ ಕುಡಚಿವರೆಗಿನ 142 ಕಿ.ಮೀ ಉದ್ದದ ರೈಲ್ವೆ ಮಾರ್ಗದ ಕಾಮಗಾರಿಗೆ 2011 ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಲ್ಲಿಯವರೆಗೆ 38 ಕಿಮೀ ಮಾತ್ರ ಪೂರ್ಣಗೊಂಡಿದೆ. 108ಕಿ.ಮೀ ಕಾಮಗಾರಿ ಬಾಕಿ ಇದೆ. ಮಾರ್ಗ ನಿರ್ಮಾಣಕ್ಕೆ ಬೇಕಾದ ಭೂಸ್ವಾಧಿನದ ವೆಚ್ಚ ಹಾಗೂ ಕಾಮಗಾರಿಯ ಶೇ.50 ರಷ್ಟು ವೆಚ್ಚ ಭರಿಸುವ ವಾಗ್ದಾನದೊಂದಿಗೆ ಕೇಂದ್ರದ ಸಹಯೋಗದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಭೂಸ್ವಾಧೀನ ಮಾಡಿಕೊಡಬೇಕಾದ ರಾಜ್ಯದ ಅಧಿಕಾರಿಗಳ ವಿಳಂಬದಿಂದಾಗಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ.&lt;/p&gt;&lt;img&gt;&lt;p&gt;ಈ ಮಾರ್ಗ ಪೂರ್ಣಗೊಂಡರೆ ಸಿಮೆಂಟ್, ಲೈಮ್ ಸ್ಟೋನ್, ಸಕ್ಕರೆ ಸಾಗಾಣಿಕೆ ಸರಳವಾಗಲಿದ್ದು ವಾಣಿಜ್ಯ ಚಟುವಟಿಕೆಗೆ ಉತ್ತೇಜನ ಸಿಗಲಿದೆ. ರಾಜ್ಯದ ನಿರ್ಲಕ್ಷದಿಂದಾಗಿ ಈ ಮಾರ್ಗ ನಿರ್ಮಾಣದ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ವೇಗ ಪಡೆದಿಲ್ಲ. ರೈಲ್ವೆ ಮಾರ್ಗ ನಿರ್ಮಿಸಲು ಒಟ್ಟು 2,460 ಎಕರೆ ಭೂಮಿ ಬೇಕಿದ್ದು, ಬಹುತೇಕ ಭೂಮಿ ಸ್ವಾಧೀನಗೊಂಡಿದೆ. ಆದರೆ, ಸ್ವಾಧೀನಪಡಿಸಿಕೊಂಡು ಭೂಮೀಯ ಮಾಲೀಕರು ನ್ಯಾಯಾಲಗಳ ಮೊರೆ ಹೋಗಿದ್ದಾರೆ.&lt;/p&gt;&lt;img&gt;&lt;p&gt;ಬಾಗಲಕೋಟೆ ಜಿಲ್ಲೆಯ ಭೂ ಸ್ವಾಧೀನಕ್ಕೆ ₹365 ಕೋಟಿ, ಬೆಳಗಾವಿ ಜಿಲ್ಲೆಗೆ ₹160 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 142 ಕಿ.ಮೀ ಮಾರ್ಗದ ಕಾಮಗಾರಿಗೆ 2010-11 ರಲ್ಲಿ ₹986 ಕೋಟಿ ವೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈಗ ಅದರ ಮೊತ್ತ ₹3,128 ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇಲ್ಲಿಯವರೆಗೆ ಶೇ.39 ರಷ್ಟು ಭೌತಿಕ ಪ್ರಗತಿಯಾಗಿದ್ದರೆ, ಶೇ.30 ರಷ್ಟು ಆರ್ಥಿಕ ಪ್ರಗತಿಯಾಗಿದೆ. ಈಗಾಗಲೇ ಪೂರ್ಣಗೊಂಡಿರುವ ಮಾರ್ಗದಲ್ಲಿ ಗೂಡ್ಸ್ ರೈಲು ಸಂಚಾರ ಆರಂಭಿಸಿದೆ. ದಾದನಟ್ಟಿ-ಯಾದವಾಡ ನಡುವಿನ 15ಕಿ.ಮೀ ಮಾರ್ಗದಲ್ಲಿ ಬರುವ ಒಂಭತ್ತು ಸಣ್ಣ ಸೇತುವೆ, ಏಳು ಕೇಳಸೇತುವೆ, ಒಂದು ಬೃಹತ್ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಯಾದವಾಡ-ಜಮಖಂಡಿ ನಡುವೆ ಶೇ.96 ರಷ್ಟು ಜಮಖಂಡಿ-ಜಗದಾಳ ನಡುವೆ ಶೇ.93 ರಷ್ಟು, ಜಗದಾಳ-ಹಾರೂಗೇರಿ ನಡುವಿನ ಶೇ.91 ರಷ್ಟು ಹಾಗೂ ಹಾರೂಗೇರಿ-ಕುಡಚಿ ನಡುವೆ ಶೇ.60 ರಷ್ಟು ಭೂಸ್ವಾಧಿನ ಆಗಿದೆ. ಲೋಕಾಪುರದಿಂದ ಯಾದವಾಡವರೆಗಿನ 21 ಕಿ.ಮೀ ಮಾರ್ಗದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ.&lt;/p&gt;&lt;img&gt;&lt;p&gt;ಕೆಲ ತಿಂಗಳುಗಳ ಹಿಂದೆ ರೈಲ್ವೆ ಮಾರ್ಗ ವೀಕ್ಷಣೆಗೆ ಬಂದಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 2027ರ ಹೊತ್ತಿಗೆ ಯೋಜನೆ ಪೂರ್ಣಗೊಳಿಸಲಾಗುವುದು ಎಂದಿದ್ದರು. ಆದರೆ, ಈಗ ನಡೆದಿರುವ ಕಾಮಗಾರಿ ವೇಗೆ ನೋಡಿದರೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಸರಕು ಸಾಗಣೆಗೆಯ ಗೂಡ್ಸ್ ರೈಲು ಸಂಚಾರ ಆರಂಭಗೊಂಡಿದೆ. ಆದರೆ, 2025 ಮಾರ್ಚನಿಂದ ಆರಂಭಗೊಳ್ಳಲಿದೆ ಎಂದು ಸಚಿವರೇ ಹೇಳಿದ್ದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿಲ್ಲ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ರೈಲು ಸಂಚಾರ ಕೂಡ ಆರಂಭಿಸಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ನೆನೆಗುದಿಗೆ ಬಿದ್ದು ಶತಮಾನದ ಅಂಚಿಗೆ ಬಂದು ನಿಂತ ಕುಡಚಿ-ಬಾಗಲಕೋಟ ರೈಲು ಮಾರ್ಗಕ್ಕೆ ಇನ್ನೂ ಯಾವಾಗ ಸಮಯ ಕೂಡಿಬರುತ್ತದೆಯೋ ಗೊತ್ತಾಗುತ್ತಿಲ್ಲ.&lt;/p&gt;&lt;img&gt;&lt;p&gt;ರೈಲ್ವೆ ಇಲಾಖೆಗೆ ಪ್ರಥಮವಾಗಿ ಪ್ಯಾಸೆಂಜರ್&zwnj; ರೈಲು ಪ್ರಾರಂಭಿಸಲು ಮನವಿ ಮಾಡಲಾಗಿದೆ. ರೈಲ್ವೆ ಇಲಾಖೆ ಮೊಂಡ ಸ್ವಭಾವ ಬಿಟ್ಟು ಜಿಲ್ಲೆಯ ಜನರ ಅಪೇಕ್ಷೆಯಂತೆ ಪ್ಯಾಸೆಂಜರ್&zwnj; ರೈಲು ಪ್ರಾರಂಭಿಸಿ ನಂತರ ಸರಕು ಸಾಗಾಣಿಕೆ ವ್ಯವಹಾರ ನಡೆಸುವುದು ಒಳ್ಳೆಯದು. ಇಲ್ಲದಿದ್ದರೇ ಹೋರಾಟ ಸಮಿತಿಯು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪಕ್ಷಾತಿತ ಹೋರಾಟ ಮಾಡಿ ರೈಲ್ವೆ ಇಲಾಖೆಗೆ ಬಿಸಿ ತಟ್ಟಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಬಾಗಲಕೋಟೆ- ಮೈಸೂರು (ಬಸವ ಎಕ್ಸ್&zwnj;ಪ್ರೆಸ್&zwnj;) ರೈಲನ್ನು ಲೋಕಾಪುರ ರೈಲು ನಿಲ್ದಾಣದಿಂದಲೇ ಆರಂಭಿಸಬೇಕು. ಇದರಿಂದ ಲೋಕಾಪುರ ಹಾಗೂ ಸುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಬೆಂಗಳೂರು ಆಸ್ಪತ್ರೆ, ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ, ವಿವಿಧ ಪುಣ್ಯಕ್ಷೇತ್ರಗಳಿಗಾಗಿ ತೆರಳುವವರಿಗೆ ಅನುಕೂಲ, ಮೈಸೂರಿನಿಂದ ಬಾಗಲಕೋಟೆ ಬೆಳಗ್ಗೆ 11.15ಕ್ಕೆ ರೈಲು ಬರುತ್ತದೆ. ಮಧ್ಯಾಹ್ನ 2.20 ಮರಳಿ ಹೋಗುತ್ತದೆ ಆ ನಡುವೆ 3 ಗಂಟೆ ಸಮಯವಿರುವುದರಿಂದ ಲೋಕಾಪುರವರೆಗೆ ವಿಸ್ತರಿಸಬೇಕೆಂದು ಹಿರಿಯ ನಾಗರಿಕರ ವೇದಿಕೆ ಪದಾಧಿಕಾರಿಗಳು ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿ ಒತ್ತಾಯಿಸಿದ್ದಾರೆ.&lt;/p&gt;&lt;p&gt;ಬಾಗಲಕೋಟೆ-ಲೋಕಾಪುರ ನಡುವೆ ಡೆಮೊ ರೈಲು ಆರಂಭಿಸುವ ಘೋಷಣೆ ಮಾಡಲಾಗಿದೆ. ಆದರೆ, ಇನ್ನೂ ಆರಂಭವಾಗಿಲ್ಲ. ಬಾಗಲಕೋಟೆ-ಲೋಕಾಪುರ ಮಾತ್ರ ಆರಂಭಿಸಿದರೇ ಉಪಯೋಗವಿಲ್ಲ, ದೂರದ ಊರುಗಳಿಗೂ ಸಂಪರ್ಕ ಕಲ್ಪಿಸಬೇಕು. ರೈಲ್ವೆ ಮಾರ್ಗ ಶೀರ್ಘ ಪೂರ್ಣಗೊಳ್ಳಬೇಕು. ಇದು ಈಡೇರುವವರೆಗೆ ಹೋರಾಟ ನಿಲ್ಲದು.&lt;/p&gt;&lt;p&gt;-ಕುತುಬುದ್ಧೀನ್ ಖಾಜಿ, ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷರು&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33"/>
        </item>
        <item>
            <title><![CDATA[ಮಳೆಗಾಗಿ ಗೊಂಬೆಗಳ ಅದ್ಧೂರಿ ಮದುವೆ; ಅರಿಶಿಣ ಕಾರ್ಯ, ಸುರಗಿ ಸುತ್ತು ಸೇರಿದಂತೆ ಎಲ್ಲವೂ ಇತ್ತು]]></title>
            <link>https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51</link>
            <guid isPermaLink="true">https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51</guid>
            <pubDate>Sat, 16 May 2026 07:29:48 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ವರ್ಚಗಲ್ ಗ್ರಾಮದಲ್ಲಿ ಮಳೆ ಕೊರತೆ ನೀಗಿಸಲು, ವರುಣ ದೇವನ ಕೃಪೆ ಕೋರಿ ಗೊಂಬೆಗಳ ಮದುವೆಯನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು. ಹಿರಿಯರು ಹಾಕಿಕೊಟ್ಟ ಈ ಸಂಪ್ರದಾಯದಂತೆ, ಗ್ರಾಮಸ್ಥರೆಲ್ಲರೂ ಸೇರಿ ಮದುವೆಯ ಎಲ್ಲಾ ಶಾಸ್ತ್ರಗಳನ್ನು ಪಾಲಿಸಿ, ಈ ವಿಶಿಷ್ಟ ವಿವಾಹವನ್ನು ನಡೆಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01krq81bk3s7t5567943qta212,imgname-wedding-of-dolls-for-rain-1778896645731.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಲೋಕಾಪುರ ಗ್ರಾಮದ ಮಹಿಳೆಯರು, ಪುರುಷರು, ಯುವಕ, ಯುವತಿಯರು ಮುದುವೆ ಗಡಿಬಿಡಿಯಲ್ಲಿದ್ದರು. ಹಾಲಗಂಬ ನೆಡುವ, ಒಳಕಲ್ಲು ಪೂಜೆ, ಬಳೆ ಉಡಿಸುವುದು, ಬೀಗರನ್ನು ಬರಮಾಡಿಕೊಳ್ಳಲು ಎದುರು ಭೇಟಿ, ಅರಿಶಿಣ ಕಾರ್ಯ, ಸುರಗಿ ಸುತ್ತುವುದು, ಬಳಿಕ ಮಾಂಗಲ್ಯ ತಂತು ನಾನೇನಾ ಮಂತ್ರ ಮೊಳಗಿ ಗ್ರಾಮಸ್ಥರೆಲ್ಲ ಅಕ್ಷತೆ ಹಾಕಿ ಹರಿಸಿದರು.&lt;/p&gt;&lt;h2&gt;&lt;strong&gt;ಗೊಂಬೆಗಳ ಮದುವೆ&lt;/strong&gt;&lt;/h2&gt;&lt;p&gt;ಹೌದು, ಈ ಎಲ್ಲ ಮದುವೆ ಸಂಪ್ರದಾಯ ನೆರವೇರಿದ್ದು ಲೋಕಾಪುರ ಸಮೀಪದ ವರ್ಚಗಲ್ ಗ್ರಾಮದಲ್ಲಿ. ಹಾಗಂತ ಇದು ಯಾವುದೋ ಜೋಡಿಗಳ ಮದುವೆ ಆಗಿರಲಿಲ್ಲ. ವರುಣನ ಕೃಪೆಗಾಗಿ ಪ್ರಾರ್ಥಿಸಿ ಶುಕ್ರವಾರ ವರ್ಚಗಲ್&zwnj; ಗ್ರಾಮದಲ್ಲಿ ನಡೆದ ಗೊಂಬೆಗಳ ಮದುವೆ. ಮಳೆ ಕೊರೆತೆಯಾದರೆ ಗುರ್ಜಿ, ಕತ್ತೆಗಳ, ಕಪ್ಪೆಗಳ ಮದುವೆ ಮಾಡುವ ಮೂಲಕ ಜನತೆ ವರುಣನಲ್ಲಿ ಬೇಡಿಕೊಳ್ಳುವ ಸಂಪ್ರದಾಯ ಈಗಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತದೆ. ಅದರಲ್ಲಿ ಗೊಂಬೆಗಳ ಮದುವೆಯೂ ಒಂದು.&lt;/p&gt;&lt;p&gt;ಓಣಿಯ ಹಿರಿಯರೆಲ್ಲ ಸೇರಿ ಗೊಂಬೆಗಳಿಗೆ ಅರಿಷಿಣ ಹಾಗೂ ಅರಿಷಿಣ ನೀರು ಹಾಕಿದರು. ಗೊಂಬೆಗಳು ಸರಿಯಾಗಿ ಕುಳಿತುಕೊಳ್ಳವುದಿಲ್ಲ ಎನ್ನುವ ಕಾರಣಕ್ಕಾಗಿ ಚಿಕ್ಕ ಮಕ್ಕಳ ಕೈಯಲ್ಲಿ ಈ ಗೊಂಬೆ ಕೊಟ್ಟು ಅವರ ಮೂಲಕವೇ ಗೊಂಬೆಗಳ ಮದುವೆ ಮಾಡಿದರು.&lt;/p&gt;&lt;h3&gt;&lt;strong&gt;ಗ್ರಾಮಸ್ಥರ ನಂಬಿಕೆ&lt;/strong&gt;&lt;/h3&gt;&lt;p&gt;ಮಳೆ ಕೊರತೆ ಎದುರಾದ ಸಂದರ್ಭದಲ್ಲಿ ನಮ್ಮ ಹಿರಿಯರು ಗೊಂಬೆಗಳ ಮದುವೆ ಮಾಡುತ್ತಿದ್ದರು. ಇದು ದೇವರಿಗೆ ಮನವರಿಕೆಯಾಗಿ, ರೈತರ ನೆರವಿಗೆ ಧಾವಿಸುತ್ತಿದ್ದ, ಅದಕ್ಕಾಗಿ ನಾವೂ ಈ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದೇವೆ. ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಸಾಗುತ್ತಿದ್ದೇವೆ ಎಂಬುದು ಗ್ರಾಮಸ್ಥರ ಅಭಿಪ್ರಾಯ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 4.50 ಲಕ್ಷದ ಸಾಲಕ್ಕೆ 6.14 ಎಕರೆ ಜಮೀನು ಹರಾಜು ಹಾಕಿದ ಕರ್ಣಾಟಕ ಬ್ಯಾಂಕ್? ರೈತ ಸಂಘದ ಆರೋಪ&lt;/strong&gt;&lt;/p&gt;&lt;p&gt;ಮದುವೆ ಗ್ರಾಮದ ಹಿರಿಯರಾದ ಈರಣ್ಣ ಬಲ್ಕಿ, ಛಾಯಪ್ಪಗೌಡ ಪಾಟೀಲ, ಬಸು ಹೊಸಳ್ಳಿ, ಶಿವಪ್ಪ ಯಾದವಾಡ, ಸಿದ್ದು ಹೊಸಮನಿ, ಭಗವಂತಪ್ಪ ತುಳಸಿಗೇರಿ,ಮಂಜು ಬಲ್ಕಿ, ಹೊಳಬಸು ವಸ್ತ್ರದ, ಬಸಲಿಂಗಪ್ಪ ಕಟ್ಟಿ, ಪುಂಡಲೀಕ ಮುತ್ತಣ್ಣವರ, ಪ್ರಕಾಶ ತಳವಾರ, ಭಾಸ್ಕರ ಚಿಕ್ಕೂರ, ಕಿಷ್ಟಪ್ಪ ಗುಡದನ್ನವರ, ಚನ್ನಬಸಪ್ಪ ಹೊಸಳ್ಳಿ, ತಾಯಂದಿರು, ಮಕ್ಕಳು ಯುವಕ ಮಿತ್ರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಿಂಬದಿ ಚಕ್ರ ತುಂಡಾಗಿ ಪಲ್ಟಿ ಹೊಡೆದ ಮಾವು ತುಂಬಿದ ಲಾರಿ; ರಸ್ತೆಯಲ್ಲಿ ಚೆಲ್ಲಿದ ಮಾವಿನ ಹಣ್ಣು!&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/north-karnataka-folk-rituals-a-grand-wedding-of-dolls-for-rain-varchagal-village-lokapur-bagalkote-mrq/articleshow-ubxfo51"/>
        </item>
        <item>
            <title><![CDATA[ಕಾರವಾರಕ್ಕೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹100 ಕೋಟಿ ಕೊಟ್ಟ ಸರ್ಕಾರ!]]></title>
            <link>https://kannada.asianetnews.com/state/karnataka-cabinet-meeting-decisions-karwar-super-specialty-hospital-health-infrastructure-sat/articleshow-wggnpmz</link>
            <guid isPermaLink="true">https://kannada.asianetnews.com/state/karnataka-cabinet-meeting-decisions-karwar-super-specialty-hospital-health-infrastructure-sat/articleshow-wggnpmz</guid>
            <pubDate>Thu, 21 May 2026 22:23:56 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯು ಕಾರವಾರದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಇದರೊಂದಿಗೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಯಿ-ಮಗು ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks5qaf6g5wrrt4vm22e5xhna,imgname-karnataka-cabinet-meeting-1779382435023.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 21): ಉ&lt;/strong&gt;ತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (KIMS) ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇನ್ನು ಜೈಲುಗಳ ಆವರಣದಲ್ಲಿ ಪೆಟ್ರೋಲ್ ಬಂಕ್ ಹಾಗೂ ವ್ಯಾಪಾರಿ ಮಳಿಗೆ ಆರಂಭಿಸಲೂ ಅನುಮೋದನೆ ನೀಡಿದೆ.&lt;/p&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಆರೋಗ್ಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸಲು ಮತ್ತು ಕಾರಾಗೃಹ ಇಲಾಖೆಯ ಆದಾಯ ಹೆಚ್ಚಿಸಲು ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ಕಾರವಾರಕ್ಕೆ ಬಂತು 'ಸೂಪರ್ ಸ್ಪೆಷಾಲಿಟಿ' ಬಲ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತುರ್ತು ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (KIMS) ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಬೃಹತ್ ಕಟ್ಟಡ ನಿರ್ಮಾಣಕ್ಕೆ ಅಂದಾಜು 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದರಿಂದ ಜಿಲ್ಲೆಯ ಜನರು ಇನ್ನು ಮುಂದೆ ಗಂಭೀರ ಕಾಯಿಲೆಗಳ ಚಿಕಿತ್ಸೆಗಾಗಿ ಮಂಗಳೂರು ಅಥವಾ ಗೋವಾಕ್ಕೆ ಅಲೆಯುವುದು ತಪ್ಪಲಿದೆ.&lt;/p&gt;&lt;h3&gt;&lt;strong&gt;ಉತ್ತರ ಕರ್ನಾಟಕದಲ್ಲಿ ತಾಯಿ-ಮಗು ಆಸ್ಪತ್ರೆಗಳು&lt;/strong&gt;&lt;/h3&gt;&lt;p&gt;ಹೈದರಾಬಾದ್ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಮುಂದಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ಸಾಮರ್ಥ್ಯದ 'ತಾಯಿ ಮತ್ತು ಮಕ್ಕಳ ಆರೋಗ್ಯ' (MCH) ಆಸ್ಪತ್ರೆಗಳನ್ನು ನಿರ್ಮಿಸಲು ಒಟ್ಟು 38 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದು ಗ್ರಾಮೀಣ ಭಾಗದ ಮಹಿಳೆಯರಿಗೆ ಮತ್ತು ನವಜಾತ ಶಿಶುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.&lt;/p&gt;&lt;h2&gt;&lt;strong&gt;ಡಿಜಿಟಲೀಕರಣ ಮತ್ತು ನಮ್ಮ ಕ್ಲಿನಿಕ್ ಬಲವರ್ಧನೆ&lt;/strong&gt;&lt;/h2&gt;&lt;p&gt;ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿನ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ABArK) ಕ್ಲೇಮ್ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲು 17.85 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲು ನಿರ್ಧರಿಸಲಾಗಿದೆ. ಇನ್ನು ರಾಜ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 'ನಮ್ಮ ಕ್ಲಿನಿಕ್'ಗಳಿಗೆ ಅಗತ್ಯವಿರುವ ಪ್ರಯೋಗಾಲಯ ಉಪಕರಣಗಳು ಮತ್ತು ಆರ್&zwnj;ಡಿ ಕಿಟ್ (RD KIT) ಖರೀದಿಸಲು 22 ಕೋಟಿ ರೂಪಾಯಿಗಳನ್ನು 15ನೇ ಹಣಕಾಸು ಆಯೋಗದ ಅನುದಾನದಡಿ ಬಳಸಲು ಅನುಮೋದನೆ ನೀಡಲಾಗಿದೆ.&lt;/p&gt;&lt;h3&gt;&lt;strong&gt;ಜೈಲಿನ ಆವರಣದಲ್ಲಿ ಪೆಟ್ರೋಲ್ ಬಂಕ್&zwnj;ಗಳು!&lt;/strong&gt;&lt;/h3&gt;&lt;p&gt;ಕಾರಾಗೃಹ ಇಲಾಖೆಯ ಜಮೀನನ್ನು ಸದ್ಬಳಕೆ ಮಾಡಿಕೊಳ್ಳಲು ಸರ್ಕಾರ ವಿನೂತನ ಯೋಜನೆ ರೂಪಿಸಿದೆ. ಬೆಂಗಳೂರಿನ ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ) ಮತ್ತು ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ಪೆಟ್ರೋಲ್ ಬಂಕ್ ಹಾಗೂ ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಡೀಲರ್&zwnj;ಶಿಪ್ ಮಾದರಿಯಲ್ಲಿ ಬೆಂಗಳೂರಿನಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಮತ್ತು ಧಾರವಾಡದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL) ವತಿಯಿಂದ ಈ ಮಳಿಗೆಗಳು ಕಾರ್ಯನಿರ್ವಹಿಸಲಿವೆ. ಇದು ಸರ್ಕಾರದ ಆದಾಯ ಹೆಚ್ಚಿಸುವುದಲ್ಲದೆ, ಸುಧಾರಣಾ ಮಾರ್ಗದಲ್ಲಿರುವ ಕೈದಿಗಳಿಗೆ ಉದ್ಯೋಗಾವಕಾಶ ನೀಡುವ ಸಾಧ್ಯತೆಯೂ ಇದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-cabinet-meeting-decisions-karwar-super-specialty-hospital-health-infrastructure-sat/articleshow-wggnpmz"/>
        </item>
        <item>
            <title><![CDATA[ಸೈಕಲ್, ಬೈಕ್ ಪ್ರಯಾಣ ಕೇವಲ ಪ್ರಚಾರದ ಗಿಮಿಕ್: ಬಿಜೆಪಿ ನಾಯಕರ ವಿರುದ್ಧ ಜಾರಕಿಹೊಳಿ ವಾಗ್ದಾಳಿ]]></title>
            <link>https://kannada.asianetnews.com/karnataka-districts/minister-satish-jarkiholi-on-pm-modi-petrol-diesel-comments-gvd/articleshow-x04o299</link>
            <guid isPermaLink="true">https://kannada.asianetnews.com/karnataka-districts/minister-satish-jarkiholi-on-pm-modi-petrol-diesel-comments-gvd/articleshow-x04o299</guid>
            <pubDate>Sun, 24 May 2026 17:35:00 +0530</pubDate>
            <description><![CDATA[&lt;p&gt;ಮೋದಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಅವರ ಕರೆಗೆ ಓಗೊಟ್ಟು ಸೈಕಲ್ ಹಾಗೂ ಬೈಕ್ ಮೂಲಕ ಪ್ರಯಾಣಿಸುತ್ತಿರುವ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಕೇವಲ ಎರಡು ದಿನ ಇದನ್ನು ಪಾಲಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kb2fen8hptdgjveb3ybyvyw9,imgname-----------------------2025-11-27t161112.237-1764241134865.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಮೇ.24): &lt;/strong&gt;ಪೆಟ್ರೋಲ್, ಡೀಸೆಲ್ ಮಿತವಾಗಿ ಬಳಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಅವರ ಕರೆಗೆ ಓಗೊಟ್ಟು ಸೈಕಲ್ ಹಾಗೂ ಬೈಕ್ ಮೂಲಕ ಪ್ರಯಾಣಿಸುತ್ತಿರುವ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಕೇವಲ ಎರಡು ದಿನ ಇದನ್ನು ಪಾಲಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಸೇರಿ ಹಲವು ಬಿಜೆಪಿ ನಾಯಕರು ಸೈಕಲ್ ಮತ್ತು ಬೈಕ್ ಸವಾರಿ ಮಾಡುವ ಮೂಲಕ ಸುದ್ದಿಯಾಗಿದ್ದರು. ಆದರೆ ಈ ನಡೆ ಕೇವಲ ತೋರಿಕೆಯದ್ದು ಎಂದರು.&lt;/p&gt;&lt;p&gt;ಕೇವಲ ಒಂದು ಫೋಟೋ ತೆಗೆದುಕೊಳ್ಳುವ ಸಲುವಾಗಿ ಇಂತಹ ಗಿಮಿಕ್&zwnj;ಗಳನ್ನು ಮಾಡಲಾಗುತ್ತಿದೆ. ಸೈಕಲ್ ಅಥವಾ ಬೈಕ್&zwnj;ನಲ್ಲಿ ಹೋಗುವ ನಾಯಕರ ಮುಂದೆ ಕ್ಯಾಮೆರಾ ತಂಡ, ಅವರ ಹಿಂದೆ ಹತ್ತಾರು ಸುರಕ್ಷತಾ ವಾಹನಗಳ ದಂಡೇ ಇರುತ್ತದೆ. ಒಬ್ಬ ಮುಖ್ಯಮಂತ್ರಿಗೆ ಇಡೀ ರಾಜ್ಯದ ಜವಾಬ್ದಾರಿ ಇರುವುದರಿಂದ ಅವರಿಗೆ ಹೆಚ್ಚಿನ ಭದ್ರತೆಯ ಅಗತ್ಯವಿರುತ್ತದೆ. ಅವರು ವಾಹನದಲ್ಲಿದ್ದಾಗ ಇರುವ ಭದ್ರತೆಗಿಂತ, ಹೊರಗೆ ಸೈಕಲ್&zwnj; ನಲ್ಲಿ ಹೋದಾಗ ಬೆಂಗಾವಲು ಪಡೆ ಮತ್ತು ಭದ್ರತೆಯ ವೆಚ್ಚ ದುಪ್ಪಟ್ಟಾಗುತ್ತದೆ ಎಂದು ಹೇಳಿದರು.&lt;/p&gt;&lt;p&gt;ಬಿಜೆಪಿ ನಾಯಕರ ಇಂತಹ ನಡೆಗಳನ್ನು ದಿನನಿತ್ಯದ ಆಡಳಿತದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಿಲ್ಲ. ಬಿ.ವೈ.ವಿಜಯೇಂದ್ರ ಅವರು ಕೂಡ ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಸುದ್ದಿಯಾಗಿದ್ದರು. ಆದರೆ ಮಾರನೇ ದಿನದಿಂದ ಯಥಾಸ್ಥಿತಿ ಮುಂದುವರಿದಿದೆ. ಸಮಯಕ್ಕೆ ಸರಿಯಾಗಿ ನ್ಯಾಯಾಲಯ ಹಾಗೂ ಪ್ರಮುಖ ಸಭೆಗಳಿಗೆ ಹಾಜರಾಗಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು, ಕೇವಲ ಒಂದೆರಡು ದಿನಗಳ ಪ್ರಚಾರಕ್ಕಾಗಿ ಇಂತಹ ನಾಟಕ ಆಡುತ್ತಿದ್ದಾರೆ ಹೊರತು, ಇವುಗಳಿಂದ ಯಾವುದೇ ನೈಜ ಬದಲಾವಣೆ ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.&lt;/p&gt;&lt;p&gt;&lt;strong&gt;ಸಿಎಂ ಗೊಂದಲ ಬೇಗ ಬಗೆಹರಿಯಲಿದೆ&lt;/strong&gt;&lt;/p&gt;&lt;p&gt;ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಸ್ಥಾನದ ಕಗ್ಗಂಟಿನ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನದ ಬದಲಾವಣೆ ಅಥವಾ ಗೊಂದಲಗಳ ಬಗ್ಗೆ ನಾವೇನೂ ಹೇಳಲು ಸಾಧ್ಯವಿಲ್ಲ, ಅದನ್ನೆಲ್ಲ ಬೆಂಗಳೂರಿನವರೇ (ಹೈಕಮಾಂಡ್) ಹೇಳಬೇಕು. ಸಿಎಂ ಸ್ಥಾನದ ವಿಷಯ ಯಾವಾಗ ಇತ್ಯರ್ಥವಾಗುತ್ತದೆ ಎಂಬುದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಇದು ನಮ್ಮ ವ್ಯಾಪ್ತಿಯಲ್ಲಿ ಬರುವ ವಿಚಾರವಲ್ಲ. ಸದ್ಯಕ್ಕೆ ಚುನಾವಣೆಗಳೆಲ್ಲ ಮುಗಿದಿರುವುದರಿಂದ ಈಗ ಬೇರೆ ಯಾವುದೇ ರಾಜಕೀಯ ಕೆಲಸಗಳಿಲ್ಲ. ಹೈಕಮಾಂಡ್ ಈಗ ಏನು ಮಾಡುತ್ತದೆ ಎಂದು ನೋಡಬೇಕಿದೆ. ಆದಷ್ಟು ಬೇಗ ಈ ಗೊಂದಲ ಬಗೆಹರಿಯಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ. ನಾವು ಕೂಡ ವೇಟ್ ಮಾಡ್ತಾ ಇದ್ದೇವೆ ಎಂದು ಸಚಿವರು ತಿಳಿಸಿದರು.&lt;/p&gt;&lt;p&gt;ಇದೇ ವೇಳೆ, ರಾಜ್ಯದಲ್ಲಿ ಅಧಿಕಾರಿಗಳು ಸಚಿವರು ಹಾಗೂ ಶಾಸಕರ ಮಾತು ಕೇಳುತ್ತಿಲ್ಲ ಎಂಬ ಆರೋಪವನ್ನು ಸತೀಶ ಜಾರಕಿಹೊಳಿ ತಳ್ಳಿ ಹಾಕಿದ ಅವರು, ಇದೆಲ್ಲ ಸಂಪೂರ್ಣ ಸುಳ್ಳು ಮಾಹಿತಿ, ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳದೆ ಇರಲು ಸಾಧ್ಯವೇ ಇಲ್ಲ. ಅಧಿಕಾರಿಗಳಿಂದ ಎಲ್ಲಾ ಕೆಲಸಗಳು ಸುಲಲಿತವಾಗಿ ನಡೆಯುತ್ತಿವೆ. ಕಡತಗಳಿಗೆ (ಫೈಲ್) ಸಹಿ ಆಗುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ ಎಂದರು.ಬಾಕ್ಸ್&zwnj;&lt;/p&gt;&lt;h2&gt;&lt;strong&gt;ಜನತೆ ಎಲ್ಲ ಪಕ್ಷವನ್ನು ಸೋಲಿಸಿದ್ದಾರೆ&lt;/strong&gt;&lt;/h2&gt;&lt;p&gt;ದೇಶದಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ಸದ್ದು ನಡೆದಿರುವ ಕುರಿತು ಮಾತನಾಡಿದ ಸಚಿವರು, ಜನ ಯಾವುದೇ ಪಕ್ಷಕ್ಕೆ ಒಂದು ಕಡೆ ಸಪೋರ್ಟ್&zwnj; ಮಾಡುತ್ತಾರೆ. ಅದರೆ ನಿರ್ಲಕ್ಷ್ಯ ಮಿತಿ ಮೀರಿದರೆ ಹೀಗಾಗುತ್ತದೆ. ಹಿಂದೆ ಇತಿಹಾಸದಲ್ಲಿ ಎಲ್ಲ ಪಕ್ಷವನ್ನು ಜನರು ಸೋಲಿಸಿದ್ದಾರೆ. ಕಾಂಗ್ರೆಸ್&zwnj; ನಲ್ಲಿ ಇಂದಿರಾ ಗಾಂಧಿ,. ವಾಜಪೇಯಿ, ಮೊರಾರ್ಜಿ ದೇಸಾಯಿ ಅವರನ್ನೂ ಸೋಲಿಸಿದ್ದಾರೆ. ಯಾವುದನ್ನೂ ಅಂಡರ್&zwnj; ಎಸ್ಟಿಮೇಟ್ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಬೇಕು. ಯುವಕರಿಗೆ ಉದ್ಯೋಗ ಇಲ್ಲ, ಎಲ್ಲರೂ ಬೀದಿಗೆ ಬಂದಿದ್ದಾರೆ. ಆ ನಿಟ್ಟಿನಲ್ಲಿ ಉದ್ಯೋಗ ಕೊಡಿಸುವ ಪ್ರೋಗ್ರಾಮ್&zwnj; ಗಳನ್ನು ಹಾಕಿಕೊಳ್ಳಬೇಕು. ಕೇವಲ ಮೂರು ದಿವಸದಲ್ಲಿ ಅಷ್ಟು ದೊಡ್ಡ ಸಂಚಲನ ಆಯಿತು. ಅಂದರೆ ಜನ ಅವಕಾಶಕ್ಕಾಗಿ ಕಾಯ್ತಾ ಇದ್ದಾರೆ. ಮೋದಿಯವರು ಹಾಗೂ ಮೋದಿಯವರ ಸರಕಾರ ಜನಕ್ಕೆ ಏನು ಬೇಕು ಆ ನಿಟ್ಟಿನಲ್ಲಿ ಕಾರ್ಯಕ್ರಮ ಹಾಕಿಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಪರ್ಯಾಯವಾಗಿ ಈ ದೇಶದ ಜನ ಎಲ್ಲರಿಗೂ ಬುದ್ಧಿ ಕಲಿಸಿದ್ದಾರೆ. ಈಗಲೂ ಕಲಿಸುತ್ತಾರಷ್ಟೇ ಎಂದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-satish-jarkiholi-on-pm-modi-petrol-diesel-comments-gvd/articleshow-x04o299"/>
        </item>
        <item>
            <title><![CDATA[ಉತ್ತರ ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಹುಬ್ಬಳ್ಳಿ, ವಿಜಯಪುರ ಜನರಿಗೆ ಈ ರೈಲಿನ ಟಿಕೆಟ್ ದರ ಇಳಿಕೆ!]]></title>
            <link>https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</link>
            <guid isPermaLink="true">https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</guid>
            <pubDate>Mon, 11 May 2026 19:53:18 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krbp7dt0zx3643fjbw2gffha,imgname-hubballi-to-rishikesh-train-1778508871487.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ/ಧಾರವಾಡ: ಉತ್ತರ ಕರ್ನಾಟಕದ ಜಿಲ್ಲೆಗಳ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ನೈಋತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಈವರೆಗೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಪ್ರಮುಖ ರೈಲುಗಳನ್ನು ಇಂದಿನಿಂದ 'ನಿಯಮಿತ ಸೇವೆ'ಗಳನ್ನಾಗಿ (Regular Train Services) ಪರಿವರ್ತಿಸಲಾಗುತ್ತಿದೆ. ಈ ಮಹತ್ವದ ನಿರ್ಧಾರವು ಉತ್ತರ ಕರ್ನಾಟಕದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ಹೊಸ ವೇಗ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ ಮತ್ತು ವಿಜಯಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 56919/20 ಹಾಗೂ 66501/02 ರೈಲುಗಳು ಇನ್ನು ಮುಂದೆ ನಿಯಮಿತವಾಗಿ ಸಂಚರಿಸಲಿವೆ. ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹುಬ್ಬಳ್ಳಿ - ವಿಜಯಪುರ ನೂತನ ನಿಯಮಿತ ಮೆಮು (MEMU- Mainline Electric Multiple Unit) ರೈಲಿಗೆ (ರೈಲು ಸಂಖ್ಯೆ: 66501) ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.&amp;nbsp;&lt;/p&gt;&lt;p&gt;ಇದರಿಂದ ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮೆಮು ರೈಲು ಸಂಚಾರದಿಂದ ವೇಗದ ಮತ್ತು ಪರಿಸರ ಸ್ನೇಹಿ ಪ್ರಯಾಣ ಸಾಧ್ಯವಾಗಲಿದೆ.&lt;/p&gt;&lt;img&gt;&lt;p&gt;ಉತ್ತರ ಭಾರತಕ್ಕೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ರೈಲು ಸಂಖ್ಯೆ 17363/64 ಹುಬ್ಬಳ್ಳಿ - ಯೋಗ ನಗರಿ ಹೃಷಿಕೇಶ ವಾರಕ್ಕೊಮ್ಮೆ ಸಂಚರಿಸುವ ರೈಲನ್ನು ಈಗ ನಿಯಮಿತ ಸೇವೆಯನ್ನಾಗಿ ಮಾಡಲಾಗಿದೆ. ಇದರಿಂದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವವರಿಗೆ ವರ್ಷಪೂರ್ತಿ ಸುಲಭ ಪ್ರಯಾಣ ಒದಗಿಸಿದಂತಾಗುತ್ತದೆ.&lt;/p&gt;&lt;img&gt;&lt;p&gt;ಈ ರೈಲುಗಳ ಸೇವೆಯು ನಿಯಮಿತವಾಗಿ ಬದಲಾದ ಕಾರಣ ಪ್ರಯಾಣಿಕರಿಗೆ ಆರ್ಥಿಕವಾಗಿ ದೊಡ್ಡ ಲಾಭ ಸಿಗಲಿದೆ.&lt;/p&gt;&lt;p&gt;ಸಾಮಾನ್ಯ ದರ್ಜೆಯ ಪ್ರಯಾಣಿಕರಿಗೆ ಇನ್ನು ಮುಂದೆ ಸೂಪರ್&zwnj;ಫಾಸ್ಟ್ ಹೆಚ್ಚುವರಿ ಶುಲ್ಕವಿರುವುದಿಲ್ಲ.&lt;/p&gt;&lt;p&gt;ಮೀಸಲು ದರ್ಜೆಯ (Reserved Class) ಟಿಕೆಟ್ ದರದಲ್ಲಿ ಸುಮಾರು 30% ರಷ್ಟು ಕಡಿತವಾಗಲಿದ್ದು, ಪ್ರಯಾಣವು ಅತ್ಯಂತ ಕೈಗೆಟಕುವ ದರದಲ್ಲಿ ಜನಸಾಮಾನ್ಯರಿಗೆ ಸಿಗಲಿದೆ.&lt;/p&gt;&lt;img&gt;&lt;p&gt;ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆಯು ದೇಶದ ಅಭಿವೃದ್ಧಿಗೆ ವೇಗ ತುಂಬುತ್ತಿದೆ. ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಶ್ಲಾಘಿಸಿದರು.&amp;nbsp;&lt;/p&gt;&lt;p&gt;ಈ ಕಾರ್ಯಕ್ರಮದ ವೇಳೆ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದ (SWR) ಜನರಲ್ ಮ್ಯಾನೇಜರ್ ಪಿ. ಅನಂತು ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬದಲಾವಣೆಯು ಉತ್ತರ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ವಲಯಕ್ಕೆ ಹೊಸ ಶಕ್ತಿ ತುಂಬಲಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036"/>
        </item>
    </channel>
</rss>
