<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 25 Apr 2026 07:18:48 +0530</lastBuildDate>
        <atom:link href="https://kannada.asianetnews.com/rss/bagalkot" rel="self" type="application/rss+xml"/>
        <item>
            <title><![CDATA[ಮದುವೆಗೆ ಕೇವಲ 10 ದಿನ ಬಾಕಿ ಇರುವಾಗ ನೇಣಿಗೆ ಶರಣಾದ ಮನರೆಗಾ ಇಂಜಿನಿಯರ್; ಮದುವೆ ಮನೆಯಲ್ಲಿ ಸೂತಕದ ಛಾಯೆ!]]></title>
            <link>https://kannada.asianetnews.com/karnataka-districts/bagalkote-mudhol-mnrega-engineer-basavaraj-kumbara-self-death-before-wedding-sat/articleshow-07hyb16</link>
            <guid isPermaLink="true">https://kannada.asianetnews.com/karnataka-districts/bagalkote-mudhol-mnrega-engineer-basavaraj-kumbara-self-death-before-wedding-sat/articleshow-07hyb16</guid>
            <pubDate>Tue, 14 Apr 2026 20:31:19 +0530</pubDate>
            <description><![CDATA[&lt;p&gt;ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ, ಮದುವೆಗೆ ಕೆಲವೇ ದಿನಗಳು ಬಾಕಿಯಿರುವಾಗ ಮನರೇಗಾ ಇಂಜಿನಿಯರ್ ಆಗಿದ್ದ ಬಸವರಾಜ ಕುಂಬಾರ (28) ಎಂಬ ಯುವಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp67zc5qhqb9dx57v33hj57g,imgname-nrega-engineer-basavaraj-death-1776178671799.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.14): ಮ&lt;/strong&gt;ದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಹಸೆಮಣೆ ಏರಲು ಸಜ್ಜಾಗುತ್ತಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸಂಭವಿಸಿದೆ. ಉದ್ಯೋಗ ಖಾತ್ರಿ (MNREGA) ಯೋಜನೆಯಲ್ಲಿ ಹೊರಗುತ್ತಿಗೆ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕುಂಬಾರ (28) ಎಂಬುವವರೇ ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಮುಧೋಳ ನಗರದ ಕಾಂಬಳೆ ಗಲ್ಲಿಯ ಬಾಡಿಗೆ ಮನೆಯಲ್ಲಿ ಬಸವರಾಜ ವಾಸವಾಗಿದ್ದರು. ಇಂದು ಅವರು ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ. ಕಳೆದ ಎಂಟು ತಿಂಗಳಿನಿಂದ ಅವರು ಮನರೆಗಾ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಸೌಮ್ಯ ಸ್ವಭಾವದವರಾಗಿದ್ದ ಬಸವರಾಜ ಇಂತಹ ನಿರ್ಧಾರಕ್ಕೆ ಮುಂದಾಗಿದ್ದು ಕುಟುಂಬದವರಿಗೆ ಭಾರಿ ಆಘಾತ ನೀಡಿದೆ.&lt;/p&gt;&lt;h2&gt;&lt;strong&gt;ಮದುವೆ ಮನೆಯಲ್ಲಿ ಸೂತಕದ ಛಾಯೆ:&lt;/strong&gt;&lt;/h2&gt;&lt;p&gt;ಎಲ್ಲಕ್ಕಿಂತ ಹೆಚ್ಚಾಗಿ ನೋವಿನ ಸಂಗತಿಯೆಂದರೆ, ಬಸವರಾಜ ಅವರಿಗೆ ಇದೇ ಏಪ್ರಿಲ್ 28 ರಂದು ಮದುವೆ ನಿಶ್ಚಯವಾಗಿತ್ತು. ಮದುವೆಗೆ ಇನ್ನು ಕೇವಲ 10-12 ದಿನಗಳಷ್ಟೇ ಬಾಕಿ ಉಳಿದಿತ್ತು. ಮನೆಯಲ್ಲಿ ಮದುವೆಯ ಸಿದ್ಧತೆಗಳು ನಡೆಯುತ್ತಿದ್ದವು, ಬಂಧು-ಮಿತ್ರರಿಗೆ ಆಮಂತ್ರಣ ಪತ್ರಿಕೆ ಹಂಚುವ ಕೆಲಸ ನಡೆಯುತ್ತಿತ್ತು. ಹಸೆಮಣೆ ಏರಿ ಹೊಸ ಜೀವನ ಆರಂಭಿಸಬೇಕಾದ ಯುವ ಇಂಜಿನಿಯರ್, ಮದುವೆಗೆ ಮುನ್ನವೇ ಸಾವಿನ ಹಾದಿ ತುಳಿದಿರುವುದು ಹತ್ತಿರದ ಸಂಬಂಧಿಗಳ ಎದೆಯನ್ನು ಸೀಳುವಂತಿದೆ.&lt;/p&gt;&lt;h3&gt;&lt;strong&gt;ಆತ್ಮ*ಹತ್ಯೆಗೆ ಕಾರಣವೇನು?&lt;/strong&gt;&lt;/h3&gt;&lt;p&gt;ಬಸವರಾಜ ಅವರ ಆತ್ಮ*ಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕೆಲಸದ ಒತ್ತಡವೇ? ಅಥವಾ ವೈಯಕ್ತಿಕ ಸಮಸ್ಯೆಗಳೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಷಯ ತಿಳಿದ ತಕ್ಷಣ ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h3&gt;&lt;strong&gt;ಪೊಲೀಸ್ ತನಿಖೆ ಚುರುಕು:&lt;/strong&gt;&lt;/h3&gt;&lt;p&gt;ಮುಧೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸವರಾಜ ಅವರ ಮೊಬೈಲ್ ಕರೆಗಳ ವಿವರ (CDR) ಮತ್ತು ಅವರ ಕೊನೆಯ ದಿನಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಸಾವಿನ ಮುನ್ನ ಅವರು ಯಾವುದೇ ಡೆತ್ ನೋಟ್ ಬರೆದಿದ್ದಾರೆಯೇ ಎಂಬ ಬಗ್ಗೆಯೂ ಶೋಧ ನಡೆಸಲಾಗುತ್ತಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bagalkote-mudhol-mnrega-engineer-basavaraj-kumbara-self-death-before-wedding-sat/articleshow-07hyb16"/>
        </item>
        <item>
            <title><![CDATA[ಸಂಸದ ಗೋವಿಂದ ಕಾರಜೋಳ ಹಾಕಿರುವ ಸವಾಲು ಹಾಸ್ಯಾಸ್ಪದ: ಸಚಿವ ಎಂ.ಬಿ.ಪಾಟೀಲ]]></title>
            <link>https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep</link>
            <guid isPermaLink="true">https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep</guid>
            <pubDate>Sat, 04 Apr 2026 00:25:07 +0530</pubDate>
            <description><![CDATA[&lt;p&gt;ಯುಕೆಪಿ ಯೋಜನೆ ಕುರಿತು ಏ.8ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7907669v3sy433fx9m4prw4,imgname-minister-mb-patil-1760165075145.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.04): &lt;/strong&gt;ಯುಕೆಪಿ ಯೋಜನೆ ಕುರಿತು ಏ.8ರಂದು ಬಹಿರಂಗವಾಗಿ ಚರ್ಚೆಗೆ ಬರುವಂತೆ ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಅವರು ಹಾಕಿರುವ ಸವಾಲು ಹಾಸ್ಯಾಸ್ಪದವಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು. ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ನಿಮಿತ್ತ ಭಗವತಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.&lt;/p&gt;&lt;p&gt;ವಿಧಾನಸಭೆ ಉಪಚುನಾವಣೆ ಪ್ರಚಾರ ಪ್ರಕ್ರಿಯೆ ಏ.7ರಂದು ಸಂಜೆ ಮುಗಿಯುತ್ತದೆ. 8ರಂದು ಸಭೆ ನಡೆಸಲು ಅವಕಾಶವೇ ಇಲ್ಲ ಎಂಬ ಸಾಮಾನ್ಯ ಜ್ಞಾನ ಕಾರಜೋಳ ಅವರಿಗೆ ಇಲ್ಲವೇ? ಕೇವಲ ಪ್ರಚಾರಕ್ಕಾಗಿ, ಉಡಾಫೆಗಾಗಿ ಇಂತಹ ಹೇಳಿಕೆ ನೀಡಿರುವ ಇವರು ಯುಕೆಪಿಗಾಗಿ ಏನು ಮಾಡಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.&lt;/p&gt;&lt;h2&gt;&lt;strong&gt;ಬಿಜೆಪಿಯವರ ಕಿಸೆಯಲ್ಲಿ ಬೆಂಕಿ ಪೊಟ್ಟಣ&lt;/strong&gt;&lt;/h2&gt;&lt;p&gt;ಏನೇ ಅಭಿವೃದ್ಧಿ ಕಾರ್ಯ ಮಾಡಿದ್ದರೂ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ. ಬಿಜೆಪಿಯವರಿಗೆ ಮಾತನಾಡಲು ಯಾವ ವಿಷಯವೂ ಇಲ್ಲ. ಬೆಂಕಿ ಪೊಟ್ಟಣ ಕಿಸೆಯಲ್ಲಿ ಇಟ್ಟುಕೊಂಡು ಕಂಡ ಕಂಡಲ್ಲಿ ಜಾತಿ, ಮತ, ದ್ವೇಷದ ಮೂಲಕ ಬೆಂಕಿ ಹಚ್ಚುವ ಇವರು. ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಪ್ರಚಾರಕ್ಕಾಗಿ ಭಾಷಣ ಮಾಡುವ ಇವರು. ಎಲ್ಲ ರಂಗಗಳಲ್ಲಿ ವಿಫಲರಾಗಿದ್ದಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಿದ್ದರು.&lt;/p&gt;&lt;p&gt;ಮೋದಿ ಅವರು ಅಧಿಕಾರಕ್ಕೆ ಬಂದು 12 ವರ್ಷವಾಯಿತು. 24 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ದಾರೆ ತಿಳಿದುಕೊಳ್ಳಿ. ರೈತರ ಸಾಲಮನ್ನಾ ಮಾಡದೇ, ಅಂಬಾನಿ, ಅದಾನಿ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿ ಈ ಧೋರಣೆ ಕಂಡ ಯುವಕರಿಗೆ ಈ ಭರವಸೆಗಳು ಭ್ರಮನಿರಸವಾಗಿದೆ ಎಂದರು. ಕಾಂಗ್ರೆಸ್ ಮುಖಂಡ ಗಿರೀಶ ನಾಡಗೌಡ ಕೆರಕಲಮಟ್ಟಿ ಮಾತನಾಡಿ, ಮೇಟಿ ಅವರು ಸರ್ವ ಜನಾಂಗದ ನಾಯಕರು. ಎಲ್ಲರೂ ಅವರ ಮನೆಗೆ ನೇರವಾಗಿ ಹೋಗಬಹುದು. ಸಾಮಾನ್ಯರು ಯಾರು ವೀರಣ್ಣ ಚರಂತಿಮಠರ ಮನೆಗೆ ಕಾಲಿಡಲು ಆಗುವುದಿಲ್ಲ. ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ವೇದಿಕೆಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಬ್ದುಲ್&zwnj; ಹಮೀದ್&zwnj; ಮುಶ್ರಿಫ್, ಸುರೇಶ ಗೂಳಪ್ಪ ರಕರೆಡ್ಡಿ, ಕಲಬಸಪ್ಪ ಹಳ್ಳೂರ, ಸಿದ್ದಣ್ಣ ರಕರೆಡ್ಡಿ, ಶರಣಪ್ಪ ಗುಳೇದ, ವಕೀಲರಾದ ಬಿ.ಜಿ. ಪಾಟೀಲ, ಚನ್ನಪ್ಪ ಕಲ್ಲೋಳ, ಸಂಗಪ್ಪ ಪೈಲದ, ಆದರ್ಶ ಹೊಸಮನಿ, ಪ್ರಭು ಪಾಟೀಲ ಕಂದಗಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.&lt;/p&gt;&lt;p&gt;ಭಗವತಿ ಗ್ರಾಮದ ನಂತರ ಕಿರಸೂರ, ಮುಗಳೊಳ್ಳಿ , ಬೆಣ್ಣೂರ ಗ್ರಾಮಗಳಲ್ಲಿ ಸಚಿವ ಎಂ.ಬಿ. ಪಾಟೀಲ ಬಿಜೆಪಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಮತಯಾಚನೆ ಮಾಡಿದರು. ಈ ವೇಳೆ ತಿಕೋಟಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರು ದಾಶ್ಯಾಳ ಸೇರಿದಂತೆ ಹಲವು ಕಾಂಗ್ರೆಸ್ ಪದಾಧಿಕಾರಿಗಳು ಮನೆ ಮನೆಗೆ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ನಡೆಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mb-patil-slams-mp-karjol-ukp-project-debate-bagalkote-bypoll-gvd/articleshow-1st5aep"/>
        </item>
        <item>
            <title><![CDATA[ಬಾಗಲಕೋಟೆ ಉಪಚುನಾವಣೆ: ಮಗನ ಬದಲು ತಂದೆಯ ಹೆಸರಿಗೆ ಮಾರ್ಕ್‌ ಮಾಡಿದ ಚುನಾವಣಾ ಸಿಬ್ಬಂದಿ!]]></title>
            <link>https://kannada.asianetnews.com/karnataka-districts/bagalkot-by-election-polling-updates-charanthimath-allegations-sakhi-booth-san/articleshow-1xiuzid</link>
            <guid isPermaLink="true">https://kannada.asianetnews.com/karnataka-districts/bagalkot-by-election-polling-updates-charanthimath-allegations-sakhi-booth-san/articleshow-1xiuzid</guid>
            <pubDate>Thu, 09 Apr 2026 12:26:36 +0530</pubDate>
            <description><![CDATA[&lt;p&gt;ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಚುರುಕಿನ ಮತದಾನ ನಡೆದಿದ್ದು, ಮತಗಟ್ಟೆಯೊಂದರಲ್ಲಿ ಸಿಬ್ಬಂದಿ ಎಡವಟ್ಟಿನಿಂದ ಗೊಂದಲ ಸೃಷ್ಟಿಯಾಯಿತು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೊರಗಿನವರು ಹಣ, ಹೆಂಡ ಹಂಚಿ ಗೂಂಡಾಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knrg4tas8jexdxqs3nmz0fsq,imgname-bagalkot-election-1775717476696.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.9): &lt;/strong&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದು, 11 ಗಂಟೆಯವರೆಗೆ ಕ್ಷೇತ್ರದಲ್ಲಿ ಶೇ. 27.82ರಷ್ಟು ಮತದಾನ ದಾಖಲಾಗಿದೆ. ಇನ್ನು ಮತಗಟ್ಟೆ ಸಂಖ್ಯೆ 167ರಲ್ಲಿ ಮತಗಟ್ಟೆ ಸಿಬ್ಬಂದಿಯ ಎಡವಟ್ಟಿನಿಂದಾಗಿ ಕೆಲಕಾಲ ಗೊಂದಲ ಉಂಟಾಯಿತು. ಮತದಾರರ ಪಟ್ಟಿಯಲ್ಲಿ ಮಗನ ಹೆಸರಿಗೆ ಮಾರ್ಕ್ ಮಾಡುವ ಬದಲು ತಂದೆಯ ಹೆಸರಿಗೆ ಸಿಬ್ಬಂದಿ ಮಾರ್ಕ್ ಮಾಡಿದ್ದರು. ಇದರಿಂದ ಸ್ಥಳದಲ್ಲಿ ಮತದಾರರು ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಬಳಿಕ ಎಚ್ಚೆತ್ತುಕೊಂಡ ಸಿಬ್ಬಂದಿ ತಪ್ಪನ್ನು ಸರಿಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.&lt;/p&gt;&lt;p&gt;ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಪತ್ನಿ ಹಾಗೂ ಕುಟುಂಬ ಸಮೇತರಾಗಿ ಹಳದಿ ಶಾಲು ಧರಿಸಿ ಬಂದು ಮತಗಟ್ಟೆ ಸಂಖ್ಯೆ 166ರಲ್ಲಿ ಹಕ್ಕು ಚಲಾಯಿಸಿದರು. ಈ ವೇಳೆ ಏಷಿಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಅವರು ಕೆಲವು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡರು. ಬೆಳಗಾವಿ ಸೇರಿದಂತೆ ಹೊರ ಜಿಲ್ಲೆಯ ಹಲವರು ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಹಣ ಮತ್ತು ಹೆಂಡ ಹಂಚುವ ಮೂಲಕ ಗೂಂಡಾಗಿರಿ ಮಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಸಿಎಂ ಸಿದ್ದರಾಮಯ್ಯ ಅವರು ಪ್ರಚಾರ ಮುಗಿಸಿ ಹೋಗಿದ್ದಾರೆ. ಚುನಾವಣೆ ವೇಳೆ 'ಗೃಹಲಕ್ಷ್ಮಿ' ಹಣ ಹಾಕಿದ್ದಕ್ಕೆ ಆಯೋಗ ಪ್ರಶ್ನೆ ಮಾಡಿದ್ದರೂ, ಸಿಎಂ ಅವರು ಆಯೋಗಕ್ಕೆ ಬಗ್ಗುವುದಿಲ್ಲ ಎಂದು ಹೇಳಿರುವುದು ಅವರ ಅಹಂಕಾರವನ್ನು ತೋರಿಸುತ್ತದೆ. ಇದು ಶೋಭೆ ತರುವಂತದ್ದಲ್ಲ ಎಂದು ಟೀಕಿಸಿದರು.&lt;/p&gt;&lt;h2&gt;&lt;strong&gt;ಗ್ರಾಮೀಣ ಭಾಗದಲ್ಲಿ ಹಬ್ಬದ ವಾತಾವರಣ&lt;/strong&gt;&lt;/h2&gt;&lt;p&gt;ಗ್ರಾಮೀಣ ಭಾಗದಲ್ಲಿ ಮತದಾನ ಅತ್ಯಂತ ಚುರುಕಾಗಿದೆ. ವಿಶೇಷವಾಗಿ ಶಿರೂರು ಗ್ರಾಮದಲ್ಲಿ 12 ಸಾವಿರ ಮತದಾರರಿದ್ದು, ಭರ್ಜರಿ ಮತದಾನ ನಡೆಯುತ್ತಿದೆ. ಅಂಧ ವೃದ್ಧೆಯೊಬ್ಬರನ್ನು ಅವರ ಗರ್ಭಿಣಿ ಸೊಸೆ ಮತದಾನಕ್ಕೆ ಕರೆತಂದು ಮಾನವೀಯತೆ ಮೆರೆದರು. ಬಿಸಿಲನ್ನು ಲೆಕ್ಕಿಸದೆ ವೃದ್ಧರು ಬಡಿಗೆ ಹಿಡಿದುಕೊಂಡು ಹಾಗೂ ವಿಕಲಚೇತನರು ವೀಲ್ ಚೇರ್ ಮೂಲಕ ಬಂದು ತಮ್ಮ ಹಕ್ಕು ಚಲಾಯಿಸುತ್ತಿರುವ ದೃಶ್ಯಗಳು ಕಂಡುಬಂದವು.&lt;/p&gt;&lt;h2&gt;&lt;strong&gt;ಸಖಿ ಮತಗಟ್ಟೆಯಲ್ಲಿ ವಿದ್ಯಾರ್ಥಿನಿಯರ ಸಾಲು&lt;/strong&gt;&lt;/h2&gt;&lt;p&gt;ಬಾಗಲಕೋಟೆಯ ಪಿಂಕ್ (ಸಖಿ) ಮತಗಟ್ಟೆ ಸಂಖ್ಯೆ 195ರಲ್ಲಿ ಮತದಾರರ ಹಬ್ಬದ ಕಳೆ ಮನೆಮಾಡಿದೆ. ಇಲ್ಲಿ ಒಟ್ಟು 1,094 ಮತದಾರರಿದ್ದು, ಅದರಲ್ಲಿ 700ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮತ್ತು ಮಹಿಳೆಯರೇ ಇದ್ದಾರೆ. ಕಾಲೇಜು ವಿದ್ಯಾರ್ಥಿನಿಯರು ತಮ್ಮ ವೋಟರ್ ಐಡಿ ಹಿಡಿದು ಸಂಭ್ರಮದಿಂದ ಸರತಿ ಸಾಲಿನಲ್ಲಿ ನಿಂತಿದ್ದರು. ಇವರಿಗೆ ವಿಶೇಷ ಭದ್ರತೆಗಾಗಿ ಪೊಲೀಸ್ ಹಾಗೂ ಸಿಎಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/bagalkot-by-election-polling-updates-charanthimath-allegations-sakhi-booth-san/articleshow-1xiuzid"/>
        </item>
        <item>
            <title><![CDATA[ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ: ಶಾಸಕ ಯತ್ನಾಳ ವಾಗ್ದಾಳಿ]]></title>
            <link>https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4</link>
            <guid isPermaLink="true">https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4</guid>
            <pubDate>Fri, 03 Apr 2026 21:55:36 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hm3weqaxtqx509mvdv9qx8jq,imgname-Basavana-Gowda-Yatnal-1705232522589.JPG" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03):&lt;/strong&gt; ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಆಗಮಿಸಿದ್ದ ಅವರು, ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.&lt;/p&gt;&lt;p&gt;ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೊದಲು ಪಂಜಾಬಿನಲ್ಲಿ ಮುನ್ಸಿಪಾಲ್ಟಿ ಚುನಾವಣೆ ಗೆದ್ದು ತೋರಿಸಲಿ. ಎಂಎಲ್&zwnj;ಎ ಚುನಾವಣೆಗೆ ನಿಂತು ಸೋತಿರುವ ವ್ಯಕ್ತಿ ಅವರು. ಮೋದಿ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಬಿಜೆಪಿ ಸೇರ್ಪಡೆ ಹೈಕಮಾಂಡ್&zwnj;ಗೆ ಬಿಟ್ಟ ವಿಷಯ. ನಾನು ದುಂಬಾಲು ಬೀಳುವುದಿಲ್ಲ. ಯೋಗ್ಯ, ಒಳ್ಳೆಯವನು ಎಂದರೆ ತೆಗೆದುಕೊಳ್ಳಲಿ. ಇಲ್ಲದಿದ್ದರೆ ಬಿಡಲಿ. ಅಲವತ್ತುಕೊಳ್ಳುವುದಿಲ್ಲ.&lt;/p&gt;&lt;p&gt;ನನ್ನನ್ನು ಪಕ್ಷದಿಂದ ಹೊರಗಡೆ ಹಾಕಿದ್ದರಿಂದ ಪಕ್ಷಕ್ಕೂ ನಷ್ಟವಾಗಿಲ್ಲ, ನನಗೂ ನಷ್ಟವಾಗಿಲ್ಲ. ಯತ್ನಾಳರನ್ನ ತೆಗೆದುಕೊಳ್ಳದಿದ್ದರೆ ಮುಂದೆ ಕಷ್ಟವಾಗಲಿದೆ ಎಂದು ಇವರೆಲ್ಲ ಹೇಳುತ್ತಾರಲ್ಲ ಎಂದು ಜೊತೆಗಿದ್ದ ಸಿ.ಸಿ.ಪಾಟೀಲ, ಸಿದ್ದು ಸವದಿ, ಅರವಿಂದ ಬೆಲ್ಲದ ಕಡೆಗೆ ತೋರಿಸಿ, ಆಗ ನೋಡೋಣ ಎಂದರು.ಯಾವುದೇ ಕಾರಣಗಳಿಂದ ಉಚ್ಚಾಟನೆಯಾಗಿರಬಹುದು. ಬಿಜೆಪಿ, ಹಿಂದೂ ಸಮಾಜ ರಕ್ಷಣೆಯಾಗಬೇಕು. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಜಗತ್ತಿನಲ್ಲೇ ಒಳ್ಳೆಯ ಕೆಲಸ ಆಗುತ್ತಿದೆ. ಬಿಜೆಪಿಯಿಂದ ಉಚ್ಚಾಟನೆಯಾದರೂ ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧವಿದೆ ಎಂದು ತಿಳಿಸಿದರು.&lt;/p&gt;&lt;p&gt;ವಿಧಾನಸಭೆಯಲ್ಲಾಗಲಿ, ವಿರೋಧ ಪಕ್ಷದ ನಾಯಕರಾಗಲಿ, ಪಕ್ಷದ ಮುಖಂಡರು ಸೇರಿಯೇ ಯಾವ ವಿಷಯ ಮಾತನಾಡಬೇಕು ಎಂದು ವಿಶ್ವಾಸಕ್ಕೆ ತೆಗೆದುಕೊಂಡೇ ಮಾಡುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವುದು, ಬ್ಲಾಕ್&zwnj;ಮೇಲ್ ಮಾಡುವುದು ನನ್ನ ಸ್ವಭಾವವಲ್ಲ. ಪೂಜ್ಯ ತಂದೆಯವರು, ಮಗನಿಗೆ ಬೈಯ್ಯಬಾರದು ಎಂದು ಹೇಳಿದ್ದಾರೆ, ಬೈಯ್ಯುವುದಿಲ್ಲ. ಏ.9ರವರೆಗೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ. ಮುಂದೇನು ಬದಲಾಗುತ್ತದೆಯೋ ನೋಡೋಣ ಎಂದರು.&lt;/p&gt;&lt;h2&gt;&lt;strong&gt;ಬಿಜೆಪಿಗೆ ದ್ರೋಹ ಮಾಡಿಲ್ಲ&lt;/strong&gt;&lt;/h2&gt;&lt;p&gt;ಕಾಂಗ್ರೆಸ್ಸಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುವುದು ನನ್ನ ಧರ್ಮ ಅಲ್ಲ. ನಾನು ಎಂದೂ ಬಿಜೆಪಿಗೆ ದ್ರೋಹ ಮಾಡುವ ಕೆಲಸ ಮಾಡಿಲ್ಲ. ಬಿಜೆಪಿಯಿಂದ ಶಾಸಕ ಆಗಿದ್ದೇನೆ. ಹಿಂದೆ ನಾನು ಎಂಎಲ್ಸಿ ಆಗಿದ್ದಾಗ ಇದೇ ಎಂ.ಬಿ.ಪಾಟೀಲ ನನ್ನ ಸಿದ್ದರಾಮಯ್ಯ ಬಳಿ ಕರೆದುಕೊಂಡು ಹೋಗಿದ್ದರು. ಆಗ ಪರಿಷತ್ ಸಭಾಪತಿ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ತೆಗೆದುಕೊಂಡು ಬಂದಿದ್ದರು. ಅವಿಶ್ವಾಸದ ಪರ ಮತ ಹಾಕಿದರೆ ನನಗೆ ಸಿಂದಗಿಯಲ್ಲಿ ಕಾಂಗ್ರೆಸ್ ಟಿಕೆಟ್ ಮತ್ತು ಎಷ್ಟು ಬೇಕು ಅಷ್ಟು ಅನುದಾನ ಕೊಡುವ ಭರವಸೆ ನೀಡಿದ್ದರು. ಆದರೆ, ನಾನು ಆಗಲ್ಲ. ನಾನು ಮೂಲ ಬಿಜೆಪಿ. ಏನೋ ಕಾರಣಕ್ಕೆ ಹೊರಗೆ ಹಾಕಿದ್ದಾರೆ ಎಂದಿದ್ದೆ ಎಂದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/basanagouda-yatnal-slams-congress-over-modi-bagalkote-bypoll-gvd/articleshow-2gr9df4"/>
        </item>
        <item>
            <title><![CDATA[ಬಾಗಲಕೋಟೆ:  ಯುವ ಪ್ರೇಮಿಗಳು ಸಾವಿಗೆ ಶರಣು: ಗೆಳತಿ ಮೃತಪಟ್ಟ ವಿಚಾರ ತಿಳಿದು ಗೆಳೆಯನೂ ಸಾವು]]></title>
            <link>https://kannada.asianetnews.com/relationship/bagalkot-young-lovers-surrenders-to-death-over-trivial-reasons/articleshow-8dty89v</link>
            <guid isPermaLink="true">https://kannada.asianetnews.com/relationship/bagalkot-young-lovers-surrenders-to-death-over-trivial-reasons/articleshow-8dty89v</guid>
            <pubDate>Wed, 08 Apr 2026 12:19:15 +0530</pubDate>
            <description><![CDATA[&lt;p&gt;ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ, ಕ್ಷುಲ್ಲಕ ಜಗಳದ ನಂತರ ಮನನೊಂದು ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಯುವತಿ ಆತ್ಮ*ಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಯುವಕನೂ ಸಾವಿಗೆ ಶರಣಾಗಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knnw9y6veht7k7zxh675bxpf,imgname-lovers-surrenders-to-death-1775629564122.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು&lt;/strong&gt;&lt;/h2&gt;&lt;p&gt;ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ. ಸಾವಿಗೀಡಾದ ಪ್ರೇಮಿಗಳನ್ನು 19 ವರ್ಷದ ಪವಿತ್ರಾ ಹಾಗೂ 20 ವರ್ಷದ ಕಾರ್ತಿಕ್ ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಮೃತ ಕಾರ್ತಿಕ್ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದವನಾಗಿದ್ದು, ಪವಿತ್ರಾ ಬನಹಟ್ಟಿಯ ಕೆ ಹೆಚ್ ಡಿ ಸಿ ಕಾಲೋನಿ ನಿವಾಸಿಯಾಗಿದ್ದಾಳೆ. ನಿನ್ನೆ ಪವಿತ್ರಾ ಹಾಗೂ ಕಾರ್ತಿಕ್ ಜಗಳ ಮಾಡಿಕೊಂಡಿದ್ದರು. ಪ್ರೇಮಿಯ ಜೊತೆ ಜಗಳದ ನಂತರ ಮನನೊಂದು ಪವಿತ್ರಾ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಈ ವಿಚಾರ ತಿಳಿದು ಆಘಾತಕ್ಕೀಡಾದ ಕಾರ್ತಿಕ್ ಕೂಡ ಬಳಿಕ ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಡಿವೋರ್ಸ್&zwnj; ಪಡೆದ ಮಗಳನ್ನು ಅದ್ದೂರಿಯಾಗಿ ಸ್ವಾಗತಿಸಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ನೀಡಿದ ಯುವತಿಯ ಮಾವ&lt;/strong&gt;&lt;strong&gt;&amp;nbsp;&lt;/strong&gt;&lt;/p&gt;&lt;p&gt;&lt;strong&gt;ವಿಶೇಷ ಮನವಿ:&lt;/strong&gt;&lt;/p&gt;&lt;p&gt;ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:&lt;/p&gt;&lt;p&gt;Sahai Helpline - 080 2549 7777&lt;/p&gt;]]></content:encoded>
            <category>bagalkot</category>
            <dc:creator>Anusha Kb</dc:creator>
            <atom:link href="https://kannada.asianetnews.com/relationship/bagalkot-young-lovers-surrenders-to-death-over-trivial-reasons/articleshow-8dty89v"/>
        </item>
        <item>
            <title><![CDATA[Bagalkote: ಅನೈತಿಕ ಸಂಬಂಧ ಅನುಮಾನ; ಎದೆ, ಹೊಟ್ಟೆ ಭಾಗಕ್ಕೆ ಒದ್ದು ಪತ್ನಿಯನ್ನು ಕೊಂದ ಪತಿ]]></title>
            <link>https://kannada.asianetnews.com/crime/husband-arrested-for-killing-wife-on-suspicion-of-immoral-relationship-savalagi-jamakhandi-bagalkote-mrq/articleshow-bfgg3d6</link>
            <guid isPermaLink="true">https://kannada.asianetnews.com/crime/husband-arrested-for-killing-wife-on-suspicion-of-immoral-relationship-savalagi-jamakhandi-bagalkote-mrq/articleshow-bfgg3d6</guid>
            <pubDate>Sat, 25 Apr 2026 07:17:53 +0530</pubDate>
            <description><![CDATA[ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಥಳಿಸಿ ಹತ್ಯೆ ಮಾಡಿದ್ದಾನೆ. ಪಕ್ಕದ ಮನೆಯಲ್ಲಿದ್ದ ಪತ್ನಿಯನ್ನು ಪ್ರಶ್ನಿಸಿದಾಗ ಉಂಟಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01h6d9nbq5nndfet4p6gfe5f5n,imgname-husband-wife-arrested-1690515975908.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಅನೈತಿಕ ಸಂಬಂಧ ಸಂಶಯದಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.&lt;/p&gt;&lt;p&gt;ಸುಮನ ಸಿದರಾಯ ತೋಟದ (33) ಹತ್ಯೆಯಾದ ಮಹಿಳೆ. ಪತಿ ಮಲ್ಲಪ್ಪ ಸಿದರಾಯ ತೋಟದ ತೋಟದ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.&lt;/p&gt;&lt;h2&gt;&lt;strong&gt;ಆಗಿದ್ದೇನು?&lt;/strong&gt;&lt;/h2&gt;&lt;p&gt;ಮೂಲತಃ ಜಮಖಂಡಿ ತಾಲೂಕಿನ ನಾಗನೂರು ಗ್ರಾಮದ ನಿವಾಸಿಗಳಾಗಿದ ಇವರು, 10 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿ ತೊದಲಬಾಗಿ ಗ್ರಾಮದಲ್ಲಿ ನೆಲೆಸಿದ್ದರು. ದಂಪತಿಗೆ 9 ವರ್ಷದ ಬಾಲಕಿ, 7 ವರ್ಷದ ಬಾಲಕಿ ಇದ್ದಾಳೆ.&lt;/p&gt;&lt;p&gt;ಗುರುವಾರ ರಾತ್ರಿ ಸುಮನ ಪಕ್ಕದ ಪರಿಚಯಸ್ಥಳಾದ ಜಕ್ಕವ್ವ ಪಾರ್ಥನಳ್ಳಿ ಮನೆಗೆ ಮಲಗಲು ಹೋಗಿದ್ದರಿಂದ ಸಂಶಯಗೊಂಡ ಪತಿ ಮಲ್ಲಪ್ಪ ಆ ಮನೆಗೆ ಹೋಗಿದ್ದು, ಅಲ್ಲಿ ಪ್ರವೀಣ ಎಂಬ ವ್ಯಕ್ತಿ ಇದ್ದು, ಆತನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಿಸಿ ಪತ್ನಿಯನ್ನು ಪ್ರಶ್ನಿಸಿದ್ದಾನೆ.&amp;nbsp;&lt;/p&gt;&lt;p&gt;ಈ ವೇಳೆ ವಾಗ್ವಾದ ಉಂಟಾಗಿ ಆಕ್ರೋಶಗೊಂಡ ಪತಿ ಮಲ್ಲಪ್ಪ ಸುಮನ್&zwnj; ಳನ್ನು ಕಸಬರಿಗೆಯಿಂದ ಥಳಿಸಿ, ಎದೆ ಹಾಗೂ ಹೊಟ್ಟೆ ಭಾಗಕ್ಕೆ ಒದ್ದು ಹಲ್ಲೆ ನಡೆಸಿದ್ದು, ಸುಮನ್&zwnj; ಅಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾಳೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿದ್ದಾರೆ. ಸಾವಳಗಿ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೇಳಿದ್ದೆಲ್ಲವನ್ನೂ ಕೊಡ್ತಿದ್ದ 57ರ ಸರ್ಕಾರಿ ಶಾಲಾ ಶಿಕ್ಷಕಿಯ 27ರ ಹರೆಯದ ಪ್ರೇಮಿ: ಏಕಾಏಕಿ ಸುಟ್ಟು ಹಾಕಿದ್ದೇಕೆ?&lt;/strong&gt;&lt;/p&gt;&lt;p&gt;ಪತಿ ಸೇರಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಯುತ್ತಿದೆ ಎಂದು ಎಸ್.ಪಿ.ಸಿದ್ದಾರ್ಥ ಗೋಯಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಡ್ಯ ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧ ಆರೋಪ; ಕುಮಾರಣ್ಣಗೆ ದೂರು ಕೊಟ್ಟ ಸಂತ್ರಸ್ತ ಗಂಡ!&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/crime/husband-arrested-for-killing-wife-on-suspicion-of-immoral-relationship-savalagi-jamakhandi-bagalkote-mrq/articleshow-bfgg3d6"/>
        </item>
        <item>
            <title><![CDATA[ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಸಂಘಟನೆ ಅಪಪ್ರಚಾರ ಆರೋಪ, ಕೇಸರಿ ಶಾಲು ಹಾಕಿ ಕೃತ್ಯ]]></title>
            <link>https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva</link>
            <guid isPermaLink="true">https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva</guid>
            <pubDate>Sat, 04 Apr 2026 23:20:20 +0530</pubDate>
            <description><![CDATA[&lt;p&gt;ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಸಂಘಟನೆ ಅಪಪ್ರಚಾರ, ಕೇಸರಿ ಶಾಲು ಹಾಕಿ ಕೃತ್ಯ, ಸಂಘಟಕ ವಶಕ್ಕೆ ಪಡೆಯಲಾಗಿದೆ. ಬಜೆಪಿ ನಾಯಕರು ಹಾಗೂ ಕಾರ್ಯಕರ್ತರು ಇದೀಗ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kncsvbn9735s9rvatzf9zy2n,imgname-bagalkote-1775324999336.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.04)&lt;/strong&gt; ಕರ್ನಾಟಕ ವಿಧಾನಸಭೆ ಉಪ ಚುನಾವಣೆ ಕಣ ರಂಗೇರಿದೆ. ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕೋಲಾಹಗಳು ಶುರುವಾಗಿದೆ. ಇದೀಗ ಬಾಗಲಕೋಟೆಯಲ್ಲಿ ಗೆಲ್ಲಲು ಅಡ್ಡ ದಾರಿ ಹಿಡಿದಿರುವುದು ಬಯಲಾಗಿದೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಎನ್&zwnj;ಎಸ್&zwnj;ಯುಐ ಸಂಘಟನೆ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಕರಪತ್ರ ಹಂಚುತ್ತಾ ಅಪಪ್ರಚಾರ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ NSUI ಸಂಘಟನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ. ಸುಮಾರು 10 ಮಂದಿ ಇದ್ದ ಈ ತಂಡದ ಎಲ್ಲಾ ಸದಸ್ಯರನ್ನು ಅರೆಸ್ಟ್ ಮಾಡುವಂತೆ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ.&lt;/p&gt;&lt;h2&gt;ಕ್ಯಾಂಪಸ್&zwnj;ನಲ್ಲಿ ಗಲಾಟೆ&lt;/h2&gt;&lt;p&gt;ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್&zwnj;ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್&zwnj; ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.&lt;/p&gt;&lt;p&gt;ಕರಪತ್ರ ಹಂಚಿಕೆ ಮಾಡ್ತಿದ್ದವರ ಮೇಲೆ ದೂರು ದಾಖಲಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಜನರನ್ನ ವಶಕ್ಕೆ ಪಡೆಯಲಾದಗಿದೆ. ಇನ್ನುಳಿದವರ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.&lt;/p&gt;&lt;h2&gt;ಕರಪತ್ರ ಹಂಚುತ್ತಿದ್ದ ಓರ್ವನ ಹಿಡಿದ ಬಿಜೆಪಿ ಕಾರ್ಯಕರ್ತರು&lt;/h2&gt;&lt;p&gt;ಕರಪತ್ರ ಹಂಚುತ್ತಿದ್ದ ಎಂದು ಓರ್ವ ಯುವಕನನ್ನು ಬಿಜೆಪಿ ಕಾರ್ಯಕರ್ತರು ಹಿಡಿದಿದ್ದಾರೆ. ಕಾರಲ್ಲಿ ಕೂತಿದ್ದ ಯುವಕನನ್ನು ಕಾರ್ಯಕರ್ತರು ಹಿಡಿದಿದ್ದಾರೆ. ಬಳಿಕ ಯುವಕನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.&lt;/p&gt;&lt;h2&gt;ಬಿಜೆಪಿ ಮುಖಂಡ ಅರುಣ ಶಹಾಪೂರ ಪ್ರತಿಕ್ರಿಯೆ&lt;/h2&gt;&lt;p&gt;ಮೊನ್ನೆ ಡಿಸಿಎಂ ಮಾದ್ಯಮಗೋಷ್ಠಿಯಲ್ಲಿ ಕೆಲ ಹೇಳಿಕೆ ನೀಡಿದ್ದರು. ವಿದ್ಯಾರ್ಥಿಗಳು ಯಾರಾದ್ರೂ ಡಬಲ್ ಓಟ್ ಮಾಡಿದ್ರೆ ಅರೆಸ್ಟ್ ಮಾಡ್ತೀವಿ ಎಂದಿದ್ರು. ಡಿಸಿಎಂ ಹೇಳಿಕೆಯಂತೆ ಈಗ ಕರಪತ್ರ ಹಂಚಿದ್ದಾರೆ. ಕೇಸರಿ ಶಾಲು ಹಾಕಿಕೊಂಡು ಕಾಲೇಜ್ ಕ್ಯಾಂಪಸ್ ಗೆ ಬಂದಿದ್ದಾರೆ. ಈಗಾಗಲೇ ಕೆಲವು ಜನರನ್ನ ವಶಕ್ಕೆ ಪಡೆದಿದ್ದಾರೆ. ಇನ್ನುಳಿದವರನ್ನೂ ಬಂಧಿಸಬೇಕು. ಮೋದಿಯವರು ಪ್ರಜಾಪ್ರಭುತ್ವದಲ್ಲಿ ಫೇರ್ ಆಂಡ್ ಫ್ರೀ ಎಲೆಕ್ಷನ್ ಆಗಬೇಕು ಎಂದಿದ್ದಾರೆ. ಆದ್ರೆ ಕಾಂಗ್ರೆಸ್ಸಿಗರು ಈ ರೀತಿ ಮಾಡೋದು ಸರಿಯಲ್ಲ. ಮುಂದಿನ ದಿನಗಳಲ್ಲಿ ಚರ್ಚಿಸಿ ಹೋರಾಟ ಮಾಡ್ತೇವೆ ಎಂದು ಅರುಣ ಶಹಾಪೂರ ಹೇಳಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Chethan Kumar</dc:creator>
            <atom:link href="https://kannada.asianetnews.com/bagalkot/political-drama-bagalkote-nsui-accused-of-spread-fake-news-against-bjp-candidate/articleshow-cwzgdva"/>
        </item>
        <item>
            <title><![CDATA[Bagalkote: ನೇಣಿಗೆ ಶರಣಾದ 19 ವರ್ಷದ ಭೂಮಿಕಾ; ಡೋಂಗ್ರಿ ಜೊತೆಗಿನ ಹಿಜಾಬ್ ಫೋಟೋ ವೈರಲ್]]></title>
            <link>https://kannada.asianetnews.com/gallery/karnataka-districts/bagalkote-navanagar-residence-19-year-old-bhumika-hanged-herself-in-home-hijab-photo-with-dongrisab-goes-viral-mrq-da5co46</link>
            <guid isPermaLink="true">https://kannada.asianetnews.com/gallery/karnataka-districts/bagalkote-navanagar-residence-19-year-old-bhumika-hanged-herself-in-home-hijab-photo-with-dongrisab-goes-viral-mrq-da5co46</guid>
            <pubDate>Thu, 16 Apr 2026 08:30:20 +0530</pubDate>
            <description><![CDATA[&lt;p&gt;19 ವರ್ಷದ ಭೂಮಿಕಾ ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ. ಅನ್ಯಕೋಮಿನ ಯುವಕನ ಕಿರುಕುಳವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಹಿಂದೂ ಸಂಘಟನೆಗಳು ಇದನ್ನು ಲವ್ ಜಿಹಾದ್ ಎಂದು ಕರೆದಿವೆ. ಯುವತಿ ಹಿಜಾಬ್ ಧರಿಸಿದ ಫೋಟೋ ವೈರಲ್ ಆಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpa2gcpz0xz56aaye6d3can3,imgname-bagalakote-love-jihad--4--1776307155679.jpg" type="image/jpeg" height="390" width="690"/>
            <content:encoded><![CDATA[&lt;p&gt;19 ವರ್ಷದ ಭೂಮಿಕಾ ಎಂಬ ಯುವತಿ ನೇಣಿಗೆ ಶರಣಾಗಿದ್ದಾಳೆ. ಅನ್ಯಕೋಮಿನ ಯುವಕನ ಕಿರುಕುಳವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಹಿಂದೂ ಸಂಘಟನೆಗಳು ಇದನ್ನು ಲವ್ ಜಿಹಾದ್ ಎಂದು ಕರೆದಿವೆ. ಯುವತಿ ಹಿಜಾಬ್ ಧರಿಸಿದ ಫೋಟೋ ವೈರಲ್ ಆಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;img&gt;&lt;p&gt;ಬಾಗಲಕೋಟೆಯಲ್ಲಿ 19 ವರ್ಷದ ಭೂಮಿಕಾ ತಿಪ್ಪಣ್ಣವರ್ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದು, ಇದಕ್ಕೆ ಅನ್ಯಕೋಮಿನ ಯುವಕನ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಗಂಭೀರ ಆರೋಪವನ್ನು ಮಾಡಿವೆ. ಇದೆಲ್ಲದರ ನಡುವೆ ಭೂಮಿಕಾ ಹಿಜಾಬ್ ಧರಿಸಿರುವ ಫೋಟೋ ಸಹ ವೈರಲ್ ಆಗುತ್ತಿದೆ. ಏನಿದು ಪ್ರಕರಣ ಎಂಬುದರ ಮಾಹಿತಿ ಇಲ್ಲಿದೆ.&lt;/p&gt;&lt;img&gt;&lt;p&gt;ನವನಗರದ ಸೆಕ್ಟೇರ್ 48ರ ನಿವಾಸಿಯಾಗಿದ್ದ ಭೂಮಿಕಾ, ಡಿಪ್ಲೋಮಾ ಓದಿಕೊಂಡಿದ್ದು, ಟೈರ್ ಮಾರಾಟ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಬಾಗಲಕೋಟೆಯಲ್ಲಿ ಆಟೋ ಓಡಿಸಿಕೊಂಡಿದ್ದ ಡೋಂಗ್ರಿಸಾಬ್ ಎಂಬಾತನೊಂದಿಗೆ ಎರಡ್ಮೂರು ವರ್ಷದಿಂದ ಸಂಪರ್ಕದಲ್ಲಿದ್ದಳು. ಈ ಡೋಂಗ್ರಿಸಾಬ್ ನೀಡಿದ ಕಿರುಕಳದಿಂದಲೇ ಭೂಮಿಕಾ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.&lt;/p&gt;&lt;img&gt;&lt;p&gt;ಡೋಂಗ್ರಿಸಾಬ್ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಭೂಮಿಕಾ ತಾಯಿ ಸಂಗೀತಾ, ಮಗಳು ಭೂಮಿಕಾಗೆ ಡೋಂಗ್ರಿಸಾಬ ಪರಿಚಯ ಇತ್ತು. ಡೋಂಗ್ರಿಸಾಬ ಅಟೋ ಡ್ರೈವರ್ ಆಗಿದ್ದು, ಕಳೆದ 4 ವರ್ಷಗಳಿಂದ ಸಂಪರ್ಕದಲ್ಲಿದ್ದನು. ಮಗಳಿಗೆ ಆಗಾಗ್ಗೆ ಫೋನ್ ಮಾಡುತ್ತಿದ್ದನು. ಒಮ್ಮೆ ಮನೆಗೆ ಬಂದು ಮಗಳನ್ನು ತನ್ನೊಂದಿಗೆ ಮದುವೆ ಮಾಡಿಕೊಡುವಂತೆ ಕೇಳಿದ್ದನು. ಆದ್ರೆ ನಾವು ಒಪ್ಪಿರಲಿಲ್ಲ ಎಂದು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಭೂಮಿಕಾ ನಮಗೆ ಒಬ್ಬಳೇ ಮಗಳಾಗಿದ್ದು, ಹೀಗಾಗಿ ಒಳ್ಳೆಯ ಹುಡುಗನ ನೋಡಿ ಮದುವೆ ಮಾಡಬೇಕು ಎಂದು ಯೋಚಿಸಿದ್ದೀವಿ. ಹಾಗೆಯೇ ಮಗಳಿಗೆ ಆ ಡೋಂಗ್ರಿ ಸಹವಾಸ ಬೇಡ ಎಂದು ಹೇಳಿದ್ರೂ ಆಕೆ ನಮ್ಮ ಮಾತು ಕೇಳಿರಲಿಲ್ಲ. ಈಗ ಏಕಾಏಕಿ ಇಂದು ನೇಣು ಹಾಕಿಕೊಂಡಿದ್ದಾಳೆ. ಡೋಂಗ್ರಿ ವಿರುದ್ಧ ಕಂಪ್ಲೇಂಟ್ ಮಾಡಿದ್ದೇವೆ. ನಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಸಂಗೀತಾ ಮನವಿ ಮಾಡಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಭೂಮಿಕಾ ಅತ್ತೆ ಲಕ್ಷ್ಮೀ ಮಾತನಾಡಿ, ಆತ ನಿತ್ಯ ಟಂಟಂ ತಂದು ನಮ್ಮ ಮನೆ ಮುಂದೆ ನಿಲ್ಲಿಸುತ್ತಿದ್ದನು. ಆಕೆಗೆ ಕರೆ ಮಾಡಿ, ಮೆಸೇಜ್ ಮಾಡಿ ಮಾತನಾಡುವಂತೆ ಪೀಡಿಸುತ್ತಿದ್ದನು. ತನ್ನೊಂದಿಗೆ ಓಡಾಡಲು ಬರುವಂತೆ ಹೇಳ್ತಿದ್ದನು. ರಾತ್ರಿ 12 ರಿಂದ 1 ಗಂಟೆಯವರೆಗೂ ಇಬ್ಬರು ಫೋನನಲ್ಲೇ ಮಾತನಾಡ್ತಿದ್ರು. ಮದುವೆ ಬೇಡ ಆದ್ರೆ ತನ್ನೊಂದಿಗೆ ಇರು ಅಂತ ಕಿರುಕಳ ಕೊಡ್ತಿದ್ದನು. ಅವನ ಕಿರುಕಳದಿಂದಲೇ ಈಕೆ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;'ತಮ್ಮದು ರಾಧಾಕೃಷ್ಣ ಲವ್&zwnj; ಸ್ಟೋರಿ..' ಎಂದಿದ್ದ ಕುಂಭಮೇಳ ಗರ್ಲ್&zwnj; ಮೋನಾಲಿಸಾ ಅಪ್ರಾಪ್ತೆ; ಮುಸ್ಲಿಂ ಪತಿಯ ವಿರುದ್ಧ ಪೋಕ್ಸೋ ಕೇಸ್&lt;/strong&gt;&lt;/p&gt;&lt;img&gt;&lt;p&gt;ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ. ನವನಗರದಲ್ಲಿ ಮುಸ್ಲಿಂ ಕಿಡಿಗೇಡಿಗಳು ಇದನ್ನೇ ದಂಧೆ ಮಾಡಿಕೊಂಡಿದ್ದಾರೆ. 46 ಗ್ಯಾಂಗ್ ಅಂತ ಮಾಡಿಕೊಂಡು ಗದ್ದಲ ಗಲಾಟೆ ಮಾಡ್ತಾರೆ. ಕಳೆದ ನಾಲ್ಕೈದು ವರ್ಷದಿಂದ ಯುವತಿ ಜೊತೆ ಡೋಂಗ್ರಿಸಾಬ್ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದನು. ರಸ್ತೆಯ ಮಧ್ಯೆ ಅಡ್ಡ ಹಾಕಿ ಕಾಡಿಸುತ್ತಿದ್ದನು. ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಎಂದು ಪ್ರಚೋದನೆ ಮಾಡ್ತಿದ್ದನು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Koppal: ಮುಸ್ತಾಫಾನ ಮೊಬೈಲ್ ರೀಸೆಟ್ ಮಾಡಿದ್ಯಾರು? ಕಡು ಬಡವನಾಗಿದ್ರೂ ಹೈಫೈ ಜೀವನಶೈಲಿ&lt;/strong&gt;&lt;/p&gt;&lt;img&gt;&lt;p&gt;ಇತ್ತೀಚಿಗೆ ರಂಜಾನ್ ವೇಳೆ ಹಿಜಾಬ್ ಬುರ್ಖಾ ಹಾಕಿಸಿ ಕರೆದುಕೊಂಡು ಓಡಾಡ್ತಿದ್ದನು. ಇದನ್ನೆಲ್ಲಾ ನೋಡಿದ್ರೆ ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ ಎನಿಸುತ್ತೆ. ಯುವತಿ ಡೆತ್ ನೋಟು ಬರೆದಿದ್ದಳು ಅನ್ನೋ ಮಾಹಿತಿ ಇದೆ. ಆದ್ರೆ ಅಧಿಕಾರಿಗಳು ಅದನ್ನ ತೆಗೆದಿರಿಸಿದ್ದಾರೆನ್ನುವ ಸಂಶಯ ಇದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳೆಲ್ಲಾ ಸೇರಿ ಮುಂದಿನ ಹೋರಾಟ ನಿರ್ಧಾರ ಮಾಡ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.&lt;/p&gt;&lt;p&gt;28ರ ಜಿಮ್ ಟ್ರೈನರ್&zwnj;ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು#Bengaluru https://t.co/Rdk2MdjyRP&lt;/p&gt;&lt;p&gt;&mdash; Asianet Suvarna News (@AsianetNewsSN) April 12, 2026&lt;/p&gt;]]></content:encoded>
            <category>bagalkot</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/bagalkote-navanagar-residence-19-year-old-bhumika-hanged-herself-in-home-hijab-photo-with-dongrisab-goes-viral-mrq-da5co46"/>
        </item>
        <item>
            <title><![CDATA[ಅನೈತಿಕ ಸಂಬಂಧದ ದ್ವೇಷದ ಕಿಚ್ಚಿಗೆ ಬೆಂಕಿ ಹಚ್ಚಿದ ಹೊಸ ಕಾರ್; ಅವನ ಜೊತೆ ಅದು ಕರಕಲು]]></title>
            <link>https://kannada.asianetnews.com/karnataka-districts/bagalkote-accused-arrested-for-pouring-petrol-on-young-man-with-new-car-and-setting-him-on-fire-jamakhandi-mrq/articleshow-ddgnlz7</link>
            <guid isPermaLink="true">https://kannada.asianetnews.com/karnataka-districts/bagalkote-accused-arrested-for-pouring-petrol-on-young-man-with-new-car-and-setting-him-on-fire-jamakhandi-mrq/articleshow-ddgnlz7</guid>
            <pubDate>Wed, 22 Apr 2026 10:30:30 +0530</pubDate>
            <description><![CDATA[&lt;p&gt;ಜಮಖಂಡಿ ತಾಲೂಕಿನಲ್ಲಿ ಹೊಸ ಕಾರು ಖರೀದಿಸಿದ ಯುವಕನನ್ನು, ಅನೈತಿಕ ಸಂಬಂಧದ ವೈಷಮ್ಯದ ಹಿನ್ನೆಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕನ ವಾಟ್ಸ್&zwnj;ಆ್ಯಪ್&zwnj; ಸ್ಟೇಟಸ್&zwnj; ನೋಡಿ ಹೊಂಚು ಹಾಕಿ, ಚಾಕು ಇರಿದು, ಕಾರಿನೊಂದಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpsrpapddnetqswyx7dwr3wd,imgname-jamakhandi-murder-1776833735373.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಹೊಸ ಕಾರು ಖರೀದಿಸಿ ಖುಷಿಯಲ್ಲಿ ಗ್ರಾಮಕ್ಕೆ ಬಂದ ಯುವಕ ಮನೆ ಸೇರುವ ಮೊದಲೇ ಆತನನ್ನು ಚಾಕು ಇರಿದು, ಕಾರಿನೊಂದಿಗೆ ಆತನಿಗೂ ಪೆಟ್ರೋಲ್&zwnj; ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಜಮಖಂಡಿ ತಾಲೂಕಿನ ಕನ್ನೋಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.&lt;/p&gt;&lt;p&gt;ಕನ್ನೋಳ್ಳಿ ಗ್ರಾಮದ ಸೋಮು ಅಲಿಯಾಸ್&zwnj; ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಸದಾಶಿವ ಪಡಸಲಗಿ, ಹಿರೇಪಡಸಲಗಿ ಗ್ರಾಮದ ರವಿ ಪಾಟೀಲ, ಚಿಕ್ಕಪಡಸಲಗಿ ಗ್ರಾಮದ ಮಹಾವೀರ ಧರೆಪ್ಪನವರ ಹಾಗೂ ಭೀರಪ್ಪ ಅಡಿಹುಡಿ, ಅಡಿಹುಡಿ ಗ್ರಾಮದ ಮಲ್ಲು ನಾವಿ ಎಂಬ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;h2&gt;&lt;strong&gt;ಅಂದು ಆಗಿದ್ದೇನು?&lt;/strong&gt;&lt;/h2&gt;&lt;p&gt;ಏ.20ರ ಸೋಮವಾರ ಸೋಮು ಪಡಸಲಗಿ ಜಮಖಂಡಿಯಲ್ಲಿ ಹೊಸ ಕಾರು ಖರೀದಿಸಿ ಗ್ರಾಮಕ್ಕೆ ಮರಳುತ್ತಿದ್ದ. ಶೋರೂಂನಲ್ಲಿ ಹೊಸ ಕಾರು ಖರೀದಿ ವೇಳೆಯ ಫೋಟೋಗಳನ್ನು ವಾಟ್ಸ್&zwnj;ಆ್ಯಪ್&zwnj; ಸ್ಟೇಟಸ್&zwnj;ನಲ್ಲಿ ಹಂಚಿಕೊಂಡಿದ್ದ. ಅನೈತಿಕ ಸಂಬಂಧ ವಿಷಯವಾಗಿ ಸೋಮು ಜೊತೆಗೆ ವೈಷಮ್ಯ ಹೊಂದಿದ್ದ ಆರೋಪಿಗಳು ಸ್ಟೇಟಸ್&zwnj; ನೋಡಿ ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸರಗೂರು ಕೊ*ಲೆಯ ರಹಸ್ಯ ಬಿಚ್ಚಿಟ್ರು ಎಸ್&zwnj;ಪಿ; ಅಮೃತಾ-ಸಿದ್ದೇಶ್ ಪ್ಲಾನ್ ಏನಾಗಿತ್ತು?&lt;/strong&gt;&lt;/p&gt;&lt;p&gt;ಗ್ರಾಮದ ಬಸ್&zwnj; ನಿಲ್ದಾಣದಲ್ಲಿ ಹೊಂಚು ಹಾಕಿ ಕಾಯ್ದು ಸೋಮವಾರ ಸಂಜೆ 7.35ರ ಸುಮಾರಿಗೆ ಕಾರು ಬರುತ್ತಿದ್ದಂತೆಯೇ ಅಡ್ಡಗಟ್ಟಿದರು. ನಂತರ ಸೋಮುನನ್ನು ಹೊರಗೆಳೆದು ಚಾಕುವಿನಿಂದ ಇರಿದು ಹತ್ಯೆ ಮಾಡಿ ರಸ್ತೆ ಮೇಲೆಯೇ ಕಾರು ಹಾಗೂ ರಕ್ತದ ಮಡುವಿನಲ್ಲಿ ಬಿದ್ದ ಸೋಮು ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿದ್ದಾರೆ.ಸಾವಳಗಿ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;28ರ ಜಿಮ್ ಟ್ರೈನರ್&zwnj;ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;Belagavi: ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಕ್ರೂರ ಪತಿರಾಯ#Woman #Dress #Huband #Wife https://t.co/Oe0AG8yMq4&lt;/p&gt;&lt;p&gt;&mdash; Asianet Suvarna News (@AsianetNewsSN) April 22, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-accused-arrested-for-pouring-petrol-on-young-man-with-new-car-and-setting-him-on-fire-jamakhandi-mrq/articleshow-ddgnlz7"/>
        </item>
        <item>
            <title><![CDATA[ರಾಜ್ಯದ 12 ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್': ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ!]]></title>
            <link>https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</link>
            <guid isPermaLink="true">https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</guid>
            <pubDate>Thu, 16 Apr 2026 19:23:32 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ 'ಎಲ್ಲೋ ಅಲರ್ಟ್' ಘೋಷಿಸಿದೆ. ಈ ಅವಧಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knds8w34zxderfy8e77w0egc,imgname-delhi-ncr-weather-alert-rain-hailstorm-thunderstorm-western-disturbance-imd-warning-wind-speed-storm-india-4-1775357948004.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.16): &lt;/strong&gt;ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ಗಂಟೆಗಳ ಕಾಲ 12 ಜಿಲ್ಲೆಗಳಲ್ಲಿ 'ಎಲ್ಲೋ ಅಲರ್ಟ್' ಘೋಷಿಸಿದೆ. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಎಲ್ಲೆಲ್ಲಿ ಅಲರ್ಟ್ ಘೋಷಿಸಲಾಗಿದೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈ ಎಚ್ಚರಿಕೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ&lt;/strong&gt;&lt;/h2&gt;&lt;p&gt;ಕೇವಲ ಸಾಧಾರಣ ಮಳೆಯಲ್ಲದೆ, ಗಾಳಿಯ ವೇಗ ಹೆಚ್ಚಿರಲಿದ್ದು ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಇದರಿಂದ ಕೃಷಿ ಭೂಮಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಗುಡುಗು ಸಹಿತ ಮಳೆ ಬರುವಾಗ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ. ಬಿರುಗಾಳಿಯ ತೀವ್ರತೆಗೆ ಹಳೆಯ ಕಟ್ಟಡಗಳು ಹಾಗೂ ದುರ್ಬಲ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv"/>
        </item>
        <item>
            <title><![CDATA[ಉಪಚುನಾವಣೆ ಕಣದಲ್ಲಿ ರಾಜಾರೋಷವಾಗಿ ಕಾಂಗ್ರೆಸ್ ಹಣ ಹಂಚಿಕೆ, 500 ರೂ ಸಾಕಾಗೊಲ್ಲ, ವೈರಲ್ ಆಯ್ತು ವಿಡಿಯೋ!]]></title>
            <link>https://kannada.asianetnews.com/politics/karnataka-bypolls-cash-distribution-allegations-rock-bagalkot-and-davanagere-videos-go-viral-gdp/articleshow-f38x9m8</link>
            <guid isPermaLink="true">https://kannada.asianetnews.com/politics/karnataka-bypolls-cash-distribution-allegations-rock-bagalkot-and-davanagere-videos-go-viral-gdp/articleshow-f38x9m8</guid>
            <pubDate>Thu, 09 Apr 2026 14:49:33 +0530</pubDate>
            <description><![CDATA[ಬಾಗಲಕೋಟೆ ಉಪಚುನಾವಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಣ ಹಂಚಿಕೆ ಆರೋಪ ಕೇಳಿಬಂದಿದ್ದು, ಸಂಬಂಧಿತ ವಿಡಿಯೋಗಳು ವೈರಲ್ ಆಗಿವೆ. ಹಣಕ್ಕಾಗಿ ಜನರು ಮುಗಿಬಿದ್ದ ದೃಶ್ಯಗಳು ಸೆರೆಯಾಗಿದ್ದು, ಇದೇ ರೀತಿ ದಾವಣಗೆರೆಯಲ್ಲೂ ಹಣ ಹಂಚಿಕೆ ಆರೋಪಗಳು ಕೇಳಿಬಂದಿವೆ. ಈ ಘಟನೆಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ರಾಜಕೀಯ ಮುಖಂಡರು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knrrghw4p3kfj1f3nwfy9kx7,imgname-karnataka-bypolls-cash-distribution-1775726249860.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಉಪಚುನಾವಣೆ ಹಿನ್ನೆಲೆ ಬಾಗಲಕೋಟೆಯಲ್ಲಿ ರಾಜಕೀಯ ಕಾವು ತಾರಕ್ಕೇರಿದ್ದು, ಮತದಾನದ ದಿನವೇ ಹಣ ಹಂಚಿಕೆ ಆರೋಪಗಳು ಗಂಭೀರ ಚರ್ಚೆಗೆ ಕಾರಣವಾಗಿವೆ. ನಗರದ ನವನಗರದ ವಾಂಬೆ ಕಾಲೋನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.&lt;/p&gt;&lt;p&gt;ಸ್ಥಳೀಯರ ಪ್ರಕಾರ, ಮತದಾರರನ್ನು ಆಕರ್ಷಿಸಲು ₹500 ಮುಖಬೆಲೆಯ ನೋಟುಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಪಡೆಯಲು ಜನರು ಮುಗಿಬಿದ್ದಿದ್ದು, ಮಹಿಳೆಯರ ನಡುವೆ ನೂಕುನುಗ್ಗಲು ಉಂಟಾದ ದೃಶ್ಯಗಳು ಕೂಡಾ ವಿಡಿಯೋದಲ್ಲಿ ಕಾಣಿಸುತ್ತಿವೆ. ಕೆಲ ಮಹಿಳೆಯರು ಕೇವಲ ಐದು ನೂರು ರೂಪಾಯಿ ಮಾತ್ರ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಗಮನ ಸೆಳೆದಿದೆ. ಅಲ್ಲದೇ, ಕಾಂಗ್ರೆಸ್ ಕಾರ್ಯಕರ್ತರು ಹಣ ನೀಡಿದ್ದಾರೆ ಎಂದು ಹೇಳುತ್ತಾ ನೋಟುಗಳನ್ನು ತೋರಿಸುತ್ತಿರುವ ದೃಶ್ಯಗಳೂ ವೈರಲ್ ಆಗಿವೆ.&lt;/p&gt;&lt;h2&gt;ಹಣಕ್ಕಾಗಿ ಕಾಂಗ್ರೆಸ್ ಮುಖಂಡ ಸಂತೋಷ ಕಾರು ಸುತ್ತುವರೆದ ಜನ&lt;/h2&gt;&lt;p&gt;ಈ ಘಟನೆ ಹಿನ್ನೆಲೆ ಪರಿಸ್ಥಿತಿ ತೀವ್ರಗೊಂಡಿದ್ದು, ಕಾಂಗ್ರೆಸ್ ಮುಖಂಡರು ಸಂಚರಿಸುತ್ತಿದ್ದ ಕಾರಿಗೆ ಸ್ಥಳೀಯರು ಮುತ್ತಿಗೆ ಹಾಕಿದ ಘಟನೆ ಕೂಡ ನಡೆದಿದೆ. ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮುಖಂಡ ಸಂತೋಷ ಅವರು ಇದ್ದ ಕಾರು ಸುತ್ತುವರೆದಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ಈ ಬೆಳವಣಿಗೆಗೆ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. &ldquo;ಮತದಾನದ ವೇಳೆ ಹಣ ಹಂಚಿಕೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ. ಈ ಕುರಿತು ಚುನಾವಣಾ ಆಯೋಗದ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ&rdquo; ಎಂದು ಅವರು ತಿಳಿಸಿದ್ದಾರೆ.&lt;/p&gt;&lt;h2&gt;ದಾವಣಗೆರೆಯಲ್ಲೂ ಮತದಾನದ ವೇಳೆ ಹಣ ಹಂಚಿಕೆ ಆರೋಪ&lt;/h2&gt;&lt;p&gt;ಇದೇ ವೇಳೆ, ದಾವಣಗೆರೆಯಲ್ಲೂ ಮತದಾನದ ವೇಳೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಬಾಷಾ ನಗರ ಮುಖ್ಯರಸ್ತೆಯಲ್ಲಿ ನಡೆದ ಘಟನೆಯ ಬಗ್ಗೆ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದಿಂದ ಹಣ ಅಥವಾ ಸೀರೆ ಹಂಚಿಕೆ ನಡೆಯುವುದಿಲ್ಲ. ನಮ್ಮನ್ನು ಪ್ರೀತಿಸುವ ಮತದಾರರು ಸ್ವಯಂ ಪ್ರೇರಿತವಾಗಿ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.&lt;/p&gt;&lt;p&gt;ನಾನು ಎಲ್ಲಾ ವಾರ್ಡ್&zwnj;ಗಳಿಗೆ ಭೇಟಿ ನೀಡುತ್ತಿದ್ದು, ಹೆಚ್ಚಿನ ಕಡೆಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ. ಆದರೆ ಬಾಷಾ ನಗರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಗೊಂದಲದ ವಾತಾವರಣ ಇದೆ. ಕೆಲವೆಡೆ ಬಹಿರಂಗವಾಗಿ ಹಣ ಹಂಚಿಕೆ ನಡೆಯುತ್ತಿರುವುದನ್ನು ಗಮನಿಸಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಇದೇ ಸಂದರ್ಭದಲ್ಲಿ, ನಲವತ್ತು ವರ್ಷಗಳಿಂದ ಕೆಲವರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಪರೋಕ್ಷವಾಗಿ ಶಾಮನೂರು ಕುಟುಂಬದ ವಿರುದ್ಧ ಟೀಕಿಸಿದ ಅಫ್ಸರ್ ಕೊಡ್ಲಿಪೇಟೆ, ಮತದಾನದ ವೇಳೆ ಹಣ ಹಂಚಿಕೆ ಮಾಡುವವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ&rdquo; ಎಂದು ಹೇಳಿದ್ದಾರೆ. ಒಟ್ಟಿನಲ್ಲಿ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಕೇಳಿಬಂದ ಹಣ ಹಂಚಿಕೆ ಆರೋಪಗಳು ಉಪಚುನಾವಣೆಯ ಸ್ವಚ್ಛತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಅಗತ್ಯತೆ ಮೂಡಿದೆ.&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/politics/karnataka-bypolls-cash-distribution-allegations-rock-bagalkot-and-davanagere-videos-go-viral-gdp/articleshow-f38x9m8"/>
        </item>
        <item>
            <title><![CDATA[ಬಿಜೆಪಿಯವರು ಎಂದು ಕೂಡ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ]]></title>
            <link>https://kannada.asianetnews.com/politics/siddaramaiah-slams-bjp-bagalakote-bypoll-campaign-congress-gvd/articleshow-gf1nn7c</link>
            <guid isPermaLink="true">https://kannada.asianetnews.com/politics/siddaramaiah-slams-bjp-bagalakote-bypoll-campaign-congress-gvd/articleshow-gf1nn7c</guid>
            <pubDate>Tue, 07 Apr 2026 12:49:08 +0530</pubDate>
            <description><![CDATA[&lt;p&gt;ಸ್ವಿಸ್ ಬ್ಯಾಂಕ್ ನಿಂದ ₹15 ಲಕ್ಷ ಹಾಕ್ತಿವಿ ಎಂದು ಮೋದಿ ಹೇಳಿದ್ದರು. ಹದಿನೈದು ಪೈಸೆಯೂ ಬರಲಿಲ್ಲ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಅಂದರು, ಪ್ರಧಾನಿ ಆಗಿ 12 ವರ್ಷ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kezraqgntjngtebfj526shcc,imgname-siddaramaiah-1768444747285.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.07): &lt;/strong&gt;ಬಿಜೆಪಿಯವರು ಎಂದು ಕೂಡ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಅವರಿಗೆ ಎಂದು ಕೂಡ ಜನ ಅವರಿಗೆ ಆಶೀರ್ವಾದ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆ ಉಪಚುನಾವಣೆಯ ಕಾಂಗ್ರೆಸ್ ಪ್ರಚಾರಾರ್ಥ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ್ರು, ಹಿಂದೆ ಅಧಿಕಾರಕ್ಕೆ ಬಂದಾಗ ಮೂರು ಜನ ಸಿಎಂ ಆದರು.&lt;/p&gt;&lt;p&gt;2018ರಲ್ಲಿ ಪೂರ್ಣ ಬಹುಮತ ಬರಲಿಲ್ಲ. ಮತ್ತೆ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದರು. ನನ್ನನ್ನು ಅಟ್ಯಾಕ್ ಮಾಡೋದೇ ಬಿಜೆಪಿಯವರ ಪ್ರಚಾರ ತಂತ್ರ. ನಾನು ಹಾಗೂ ಕಾಂಗ್ರೆಸ್ ಪಕ್ಷ ಬಡವರ ಪರ ಇರೋದಕ್ಕೆ ಟಾರ್ಗೆಟ್&zwnj; ಮಾಡ್ತಾರೆ. ಯಡಿಯೂರಪ್ಪ ನನಗೆ ನಂಬಿಕೆ ದ್ರೋಹಿ. ವಿಶ್ವಾಸ ದ್ರೋಹಿ, ಭ್ರಷ್ಟ ಅಂದರು. ನಿಜವಾದ ಭ್ರಷ್ಟ ಯಡಿಯೂರಪ್ಪ, ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಎಂದು ಕುಟುಕಿದರು.&lt;/p&gt;&lt;p&gt;ಸ್ವಿಸ್ ಬ್ಯಾಂಕ್ ನಿಂದ ₹15 ಲಕ್ಷ ಹಾಕ್ತಿವಿ ಎಂದು ಮೋದಿ ಹೇಳಿದ್ದರು. ಹದಿನೈದು ಪೈಸೆಯೂ ಬರಲಿಲ್ಲ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಅಂದರು, ಪ್ರಧಾನಿ ಆಗಿ 12 ವರ್ಷ ಆಯಿತು, 24 ಕೋಟಿ ಉದ್ಯೋಗ ಕೊಡಬೇಕಿತ್ತು ಕೊಟ್ಟರಾ? ರೈತರ ಆದಾಯ ದುಪ್ಪಟ್ಟು ಮಾಡ್ತಿನಿ ಅಂದ್ರು ಮಾಡಿದ್ರಾ! ಮೋದಿ ಅಧಿಕಾರಕ್ಕೆ ಬಂದಾಗ ಡಾಲರ್ ಬೆಲೆ ₹58 ಇತ್ತು. ಈಗ ₹95 ರೂಪಾಯಿ ಆಗಿದೆ ಎಂದು ಕಾಲೆಳೆದರು.&lt;/p&gt;&lt;p&gt;&lt;strong&gt;ಭರ್ಜರಿ ರೋಡ್ ಶೋ:&lt;/strong&gt; ಕಾಂಗ್ರೆಸ್ ಪಕ್ಷದಿಂದ ಭರ್ಜರಿ ರೋಡ್ ಶೋ ನಡೆಸಲಾಯಿತು, ತೆರೆದ ವಾಹನದಲ್ಲಿ ಹಳೆ ನಗರದ ಬೀದಿಗಳಲ್ಲಿ ಮತಯಾಚನೆ ಮಾಡಿದ ಸಿಎಂಗೆ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಅಜಯಕುಮಾರ್&zwnj; ಸರನಾಯಕ್, ಅಭ್ಯರ್ಥಿ ಉಮೇಶ್ ಮೇಟಿ ಸಾಥ್&zwnj; ನೀಡಿದರು. ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ನಡೆದ ರೋಡ್ ಶೋ ಬೀಳೂರ ಅಜ್ಜನ ದೇವಸ್ಥಾನದಿಂದ ಆರಂಭವಾಗಿ, ಟೆಂಗಿನಮಠ, ಪಂಕಾ ಮಸೀದಿ, ಎಂಜಿ ರಸ್ತೆ, ಬಸವೇಶ್ವರ ವೃತ್ತವರೆಗೆ ನಡೆಯಿತು.&lt;/p&gt;&lt;p&gt;&lt;strong&gt;ಆಝಾನ್ ವೇಳೆ ಭಾಷಣ ನಿಲ್ಲಿಸಿದ ಉಮೇಶ ಮೇಟಿ: &lt;/strong&gt;ನಗರದ ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಬಹಿರಂಗ ಬಹಿರಂಗ ಸಭೆಯಲ್ಲಿ ಅಭ್ಯರ್ಥಿ ಉಮೇಶ ಮೇಟಿ ಮಾತನಾಡುವ ಸಮಯಲ್ಲಿ ಆಝಾನ್ ಆರಂಭವಾಯಿತು. ಈ ವೇಳೆ ಭಾಷಣ ನಿಲ್ಲಿಸಿದ ಉಮೇಶ ಮೇಟಿ ಆಝಾನ್ ಮುಗಿಯುತ್ತಿದ್ದಂತೆಯೇ ಮತ್ತೆ ಭಾಷಣ ಆರಂಭಿಸಿ ಮತಯಾಚಿಸಿದರು.&lt;/p&gt;&lt;h2&gt;&lt;strong&gt;ಮಹಿಳೆ ಸಾವು ಮೌನಾಚರಣೆ&lt;/strong&gt;&lt;/h2&gt;&lt;p&gt;ಬಾಗಲಕೋಟೆ ಉಪಚುನಾವಣೆಯ ಕಾಂಗ್ರೆಸ್ ಪ್ರಚಾರಾರ್ಥ ಮೆರವಣಿಗೆಯಲ್ಲಿ ಭಾಗಿಯಾದ ಫಾಥಿಮಾ ಎಂಬ ಮಹಿಳೆ ಸಾವಿನ ಹಿನ್ನೆಲೆಯಲ್ಲಿ ವೇದಿಕೆಯಿಂದ ಒಂದು ನಿಮಿಷ ಮೌನಾಚರಣೆ ಮೂಲಕ ಕೈ ಮುಖಂಡರು, ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/siddaramaiah-slams-bjp-bagalakote-bypoll-campaign-congress-gvd/articleshow-gf1nn7c"/>
        </item>
        <item>
            <title><![CDATA[ಸಚಿವ ವಿ. ಸೋಮಣ್ಣ ಭಾಷಣಕ್ಕೆ ಬಾಗಲಕೋಟೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ; ಉಪ ಚುನಾವಣೆಯಲ್ಲಿ ವಾಗ್ವಾದ!]]></title>
            <link>https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws</link>
            <guid isPermaLink="true">https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws</guid>
            <pubDate>Fri, 03 Apr 2026 20:49:48 +0530</pubDate>
            <description><![CDATA[&lt;p&gt;ಬಾಗಲಕೋಟೆಯ ಐಹೊಳೆ ಗ್ರಾಮದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಷಣ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ಬೈಕ್ ರೇಸ್ ಮತ್ತು ಕೇಕೆ ಹಾಕಿ ಗದ್ದಲ ಸೃಷ್ಟಿಸಿದ್ದರಿಂದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn9yngcyq8hq0p1v509tg1n5,imgname-bagalkot-by-election-1775229387165.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03): ರಾ&lt;/strong&gt;ಜ್ಯದಲ್ಲಿ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಐಹೊಳೆ ಗ್ರಾಮದಲ್ಲಿ ರಾಜಕೀಯ ಸಂಘರ್ಷವೊಂದು ನಡೆದಿದೆ. ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಯುವ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬಾಗಲಕೋಟೆ ಉಪಚುನಾವಣೆ ನಿಮಿತ್ತ ಐಹೊಳೆ ಗ್ರಾಮದಲ್ಲಿ ಬಿಜೆಪಿ ಮುಖಂಡರು ಬೃಹತ್ ಪ್ರಚಾರ ಸಭೆಯನ್ನು ಹಮ್ಮಿಕೊಂಡಿದ್ದರು. ವೇದಿಕೆಯ ಮೇಲೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕೆಲವು ಕಾಂಗ್ರೆಸ್ ಯುವ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಕಿರಿಕಿರಿ ಉಂಟುಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಬೈಕ್ ರೇಸ್ ಮತ್ತು ಕೇಕೆ:&lt;/strong&gt;&lt;/h2&gt;&lt;p&gt;ಸಚಿವ ವಿ. ಸೋಮಣ್ಣ ಅವರು ಭಾಷಣ ಮಾಡುತ್ತಿದ್ದಂತೆಯೇ, ಕಾಂಗ್ರೆಸ್ ಕಾರ್ಯಕರ್ತರು ಸಭೆಯ ಸುತ್ತಮುತ್ತ ಬೈಕ್ ರೇಸ್ ಮಾಡುತ್ತಾ ಭಾರಿ ಸದ್ದು ಮಾಡಿದ್ದಾರೆ. ಅಷ್ಟೇ ಅಲ್ಲದೆ, ಜೋರಾಗಿ ಕೇಕೆ ಹಾಕುವ ಮೂಲಕ ಸಚಿವರ ಭಾಷಣ ಯಾರಿಗೂ ಕೇಳಿಸದಂತೆ ಅಡ್ಡಿಪಡಿಸಿದ್ದಾರೆ. ಈ ವರ್ತನೆಯಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಯುವಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿಗೆ ನಾಂದಿ ಹಾಡಿತು.&lt;/p&gt;&lt;h3&gt;&lt;strong&gt;ಪೊಲೀಸರ ಮಧ್ಯಪ್ರವೇಶ:&lt;/strong&gt;&lt;/h3&gt;&lt;p&gt;ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿದರು. ಪರಿಸ್ಥಿತಿ ಕೈಮೀರಿ ಹೋಗುವ ಮುನ್ನವೇ ಗಲಾಟೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿ ಕಳಿಸಿದರು. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಸಂಘರ್ಷ ತಪ್ಪಿದಂತಾಗಿದೆ. ಉಪಚುನಾವಣಾ ಕಣದಲ್ಲಿ ಇಂತಹ ಘಟನೆಗಳು ಜಿದ್ದಾಜಿದ್ದಿನ ರಾಜಕೀಯಕ್ಕೆ ಸಾಕ್ಷಿಯಾಗುತ್ತಿವೆ. ಐಹೊಳೆ ಗ್ರಾಮದಲ್ಲಿ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಚುನಾವಣಾ ಪ್ರಚಾರ ಕಾರ್ಯ ಮುಂದುವರಿದಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಈ ಸಂಘರ್ಷ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/bagalkot-by-election-aihole-bjp-congress-clash-minister-v-somanna-speech-interrupted-sat/articleshow-gvuxaws"/>
        </item>
        <item>
            <title><![CDATA[ಲೋಕಾಯುಕ್ತ ಬಲೆಗೆ ಬಿದ್ದ ಬಾಗಲಕೋಟೆ ಪಿಎಸ್‌ಐ ಮತ್ತು ಕಾನ್‌ಸ್ಟೇಬಲ್; ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಅರೆಸ್ಟ್!]]></title>
            <link>https://kannada.asianetnews.com/karnataka-districts/bagalkot-lokayukta-trap-kerur-psi-and-constable-arrested-bribe-sat/articleshow-iqgxax0</link>
            <guid isPermaLink="true">https://kannada.asianetnews.com/karnataka-districts/bagalkot-lokayukta-trap-kerur-psi-and-constable-arrested-bribe-sat/articleshow-iqgxax0</guid>
            <pubDate>Wed, 22 Apr 2026 14:47:54 +0530</pubDate>
            <description><![CDATA[&lt;p&gt;ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್&zwnj;ಐ ಮತ್ತು ಕಾನ್&zwnj;ಸ್ಟೇಬಲ್, ಪ್ರಕರಣವೊಂದರಿಂದ ಹೆಸರು ಕೈಬಿಡಲು ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಪೊಲೀಸರು, ₹1.70 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpt7naktvdwxk13rjnn74w69,imgname-bagalkot-psi-arrest-by-lokayukta-1776849431162.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.22): ಬಾ&lt;/strong&gt;ದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಇಸ್ಪೀಟ್ ಮತ್ತು ಬಡ್ಡಿ ದಂಧೆಯ ಪ್ರಕರಣದಿಂದ ಹೆಸರು ಕೈಬಿಡಲು ಹಾಗೂ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್&zwnj;ಐ ಮತ್ತು ಕಾನ್&zwnj;ಸ್ಟೇಬಲ್ ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರೇ ಈ ರೀತಿ ಲಂಚದ ಹಾದಿ ಹಿಡಿದಿರುವುದು ಇಡೀ ಇಲಾಖೆಗೆ ಮುಜುಗರ ತಂದಿದೆ.&lt;/p&gt;&lt;h3&gt;&lt;strong&gt;ಘಟನೆಯ ಸಾರಾಂಶ:&lt;/strong&gt;&lt;/h3&gt;&lt;p&gt;ಕೆರೂರು ಪೊಲೀಸ್ ಠಾಣೆಯ ಪಿಎಸ್&zwnj;ಐ ಭೀಮಪ್ಪ ರಬಕವಿ ಮತ್ತು ಕಾನ್&zwnj;ಸ್ಟೇಬಲ್ ಸಂತೋಷ್ ಬಿರಾದಾರ ಅವರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಗಳು. ಮುತ್ತಪ್ಪ ನಾಯ್ಕರ್ ಎಂಬುವವರ ಮೇಲೆ ಇಸ್ಪೀಟ್ ಆಟ ಮತ್ತು ಕಾನೂನುಬಾಹಿರ ಬಡ್ಡಿ ವ್ಯವಹಾರದ ಕೇಸ್ ಹಾಕುವುದಾಗಿ ಈ ಇಬ್ಬರು ಪೊಲೀಸರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ್ರಕರಣದಿಂದ ಹೆಸರನ್ನು ತೆಗೆದುಹಾಕಲು ಮತ್ತು ಅವರ ಬೈಕ್ ಅನ್ನು ಮರಳಿ ನೀಡಲು ಒಟ್ಟು 2 ಲಕ್ಷ ರೂಪಾಯಿ ಹಣಕ್ಕೆ ಪಿಎಸ್&zwnj;ಐ ಭೀಮಪ್ಪ ಬೇಡಿಕೆಯಿಟ್ಟಿದ್ದರು.&lt;/p&gt;&lt;h3&gt;&lt;strong&gt;ಲೋಕಾಯುಕ್ತರ ಚಾಣಾಕ್ಷ ದಾಳಿ:&lt;/strong&gt;&lt;/h3&gt;&lt;p&gt;ಪೊಲೀಸರ ಈ ಕಿರುಕುಳದಿಂದ ಬೇಸತ್ತ ಮುತ್ತಪ್ಪ ನಾಯ್ಕರ್ ಅವರು ಸುಮ್ಮನೆ ಕೂರದೆ, ಬಾಗಲಕೋಟೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರುದಾರ ಮುತ್ತಪ್ಪ ಮತ್ತು ಪಿಎಸ್&zwnj;ಐ ನಡುವೆ ನಡೆದ ದೂರವಾಣಿ ಕರೆಯನ್ನು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು. ಯೋಜನೆಯಂತೆ ಮುತ್ತಪ್ಪ ಅವರು 1,70,000 ರೂಪಾಯಿ ಲಂಚದ ಹಣವನ್ನು ನೀಡಲು ಮುಂದಾದಾಗ, ಕಾನ್&zwnj;ಸ್ಟೇಬಲ್ ಸಂತೋಷ್ ಬಿರಾದಾರ ಮೂಲಕ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.&lt;/p&gt;&lt;h2&gt;&lt;strong&gt;ತನಿಖಾ ತಂಡ:&lt;/strong&gt;&lt;/h2&gt;&lt;p&gt;ಈ ಕಾರ್ಯಾಚರಣೆಯು ಲೋಕಾಯುಕ್ತ ಎಸ್&zwnj;ಪಿ ಮಹಾಲಿಂಗ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ತಂಡವು ಈ ದಾಳಿಯನ್ನು ಸಂಘಟಿಸಿತ್ತು. ಸದ್ಯ ಪಿಎಸ್&zwnj;ಐ ಭೀಮಪ್ಪ ರಬಕವಿ ಮತ್ತು ಕಾನ್&zwnj;ಸ್ಟೇಬಲ್ ಸಂತೋಷ್ ಬಿರಾದಾರ ಅವರನ್ನು ಬಂಧಿಸಲಾಗಿದ್ದು, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕೆರೂರು ಪೊಲೀಸ್ ಠಾಣೆಯಲ್ಲಿ ಮಹಜರು ಪ್ರಕ್ರಿಯೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕ ಆಕ್ರೋಶ:&lt;/strong&gt;&lt;/h3&gt;&lt;p&gt;ಬಾದಾಮಿ ತಾಲೂಕಿನಾದ್ಯಂತ ಈ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಜನಸಾಮಾನ್ಯರಿಗೆ ನ್ಯಾಯ ನೀಡುವ ಬದಲು, ಸುಳ್ಳು ಕೇಸ್ ಹಾಕುವ ಬೆದರಿಕೆ ಹಾಕಿ ಹಣ ವಸೂಲಿಗೆ ಇಳಿದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. 'ಬಡವರ ಮೇಲೆ ಇಲ್ಲಸಲ್ಲದ ಕೇಸ್ ಹಾಕಿ ಹಣ ಪಡೆಯುವ ಅಧಿಕಾರಿಗಳಿಗೆ ಇದು ತಕ್ಕ ಶಾಸ್ತಿ' ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ದಾಳಿಯು ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಲಂಚದ ಬೇಡಿಕೆಯಿಡುವವರ ವಿರುದ್ಧ ಧ್ವನಿ ಎತ್ತಲು ಜನರಿಗೆ ಸ್ಫೂರ್ತಿ ನೀಡಿದೆ. ಸದ್ಯ ಲೋಕಾಯುಕ್ತರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>bagalkot</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bagalkot-lokayukta-trap-kerur-psi-and-constable-arrested-bribe-sat/articleshow-iqgxax0"/>
        </item>
        <item>
            <title><![CDATA[ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು]]></title>
            <link>https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers</link>
            <guid isPermaLink="true">https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers</guid>
            <pubDate>Fri, 03 Apr 2026 23:51:13 +0530</pubDate>
            <description><![CDATA[&lt;p&gt;ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.03): &lt;/strong&gt;ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ.&lt;/p&gt;&lt;p&gt;ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾಗಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: &lt;/strong&gt;ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುವುದಿಲ್ಲ. ಹೀಗಾಗಿ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ ಯತ್ನಾಳ ಅವರನ್ನೇ ಗೊಗರೆದು ಕರೆತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದ ಅವರು, ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.&lt;/p&gt;&lt;p&gt;ಲೋಕಸಭಾ ಸ್ಥಾನ ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜನಸಂಖ್ಯೆಗೆ ಅನುಗುಣವಾಗಿ ಸ್ಥಾನ ಹೆಚ್ಚಿಸಬೇಕು. ಆದರೆ ಮಲತಾಯಿ ಧೋರಣೆ ಮಾಡಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವುದಕ್ಕೆ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.&lt;/p&gt;&lt;h2&gt;&lt;strong&gt;ಎರಡೂ ಕಡೆ ಗೆಲುವು ನಮ್ಮದೆ&lt;/strong&gt;&lt;/h2&gt;&lt;p&gt;ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಬಜೆಟ್&zwnj;ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು. ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಎಂದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/siddaramaiah-slams-somanna-bjp-bagalkote-bypoll-karnataka-gvd/articleshow-mqlyers"/>
        </item>
        <item>
            <title><![CDATA[ಶತಮಾನದ ಇತಿಹಾಸವಿರುವ ಕುಡಚಿ-ಬಾಗಲಕೋಟೆ ರೈಲು ಮತ್ತೆ  ನೇಪಥ್ಯಕ್ಕೆ, ಕನಸು ಹಳಿ ತಪ್ಪಿತೇ?]]></title>
            <link>https://kannada.asianetnews.com/karnataka-districts/kudachi-bagalkot-railway-line-project-faces-delays-again-only-41-km-completed-in-over-a-decade-gdp/articleshow-rni4k5p</link>
            <guid isPermaLink="true">https://kannada.asianetnews.com/karnataka-districts/kudachi-bagalkot-railway-line-project-faces-delays-again-only-41-km-completed-in-over-a-decade-gdp/articleshow-rni4k5p</guid>
            <pubDate>Sat, 18 Apr 2026 17:58:50 +0530</pubDate>
            <description><![CDATA[ಶತಮಾನದ ಇತಿಹಾಸವಿರುವ ಕುಡಚಿ-ಬಾಗಲಕೋಟೆ ರೈಲು ಮಾರ್ಗ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದ್ದು, ನೇಪಥ್ಯಕ್ಕೆ ಸರಿಯುವ ಆತಂಕ ಎದುರಾಗಿದೆ. ಕೇಂದ್ರ ರೈಲ್ವೆ ಇಲಾಖೆಯ ನಿರ್ಲಕ್ಷ್ಯ ಹಾಗೂ ಜನಬೆಂಬಲದ ಕೊರತೆಯ ನಡುವೆಯೂ, ಹೋರಾಟ ಸಮಿತಿಯು ಕಾಮಗಾರಿ ಪೂರ್ಣಗೊಳ್ಳುವವರೆಗೂ ನಿರಂತರ ಹೋರಾಟ ನಡೆಸಲು ಸಜ್ಜಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ctz40sep364mvzdbvagrrvx1,imgname-Bilaspur-Manali-Leh-Railway-Line-7.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಾನಂದ ಮಹಾಬಲಶೆಟ್ಟಿ&lt;/p&gt;&lt;p&gt;&lt;strong&gt;ರಬಕವಿ-ಬನಹಟ್ಟಿ: &lt;/strong&gt;ಶತಮಾನದ ಇತಿಹಾಸವಿರುವ ಕುಡಚಿ-ಬಾಗಲಕೋಟೆ ರೈಲು ಮಾರ್ಗ (೧೪೨ ಕಿ.ಮೀ) ಕಾಮಗಾರಿ ೨೦೦೮ರಲ್ಲಿ ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದೀನ್ ಖಾಜಿ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಧ್ವನಿಸಿದ್ದರ ಪರಿಣಾಮ ೨೦೧೦ರಲ್ಲಿ ಪುನಃ ಕಾರ್ಯಾರಂಭಗೊಂಡ ಯೋಜನೆ ಆಮೆಗತಿಯಲ್ಲಿಯೇ ಮುನ್ನಡೆದು ಇದೀಗ ಮತ್ತೇ ನೇಪಥ್ಯಕ್ಕೆ ಸರಿಯುವಂತಾಗಿದೆ.&lt;/p&gt;&lt;p&gt;2012ರಲ್ಲಿ ಶುರುವಾದ ರೈಲು ಮಾರ್ಗ ಕಾರ್ಯ 142 ಕಿಮೀ ಪೈಕಿ ಈವರೆಗೆ ಕೇವಲ 41 ಕಿಮೀನಷ್ಟು ಕಾಮಗಾರಿ ನಡೆದಿದೆ. ಇನ್ನುಳಿದ 101 ಕಿಮೀನಷ್ಟು ಕಾರ್ಯದಲ್ಲಿ ಲೋಕಾಪುರದಿಂದ ಯಾದವಾಡವರೆಗೆ 22 ಕಿಮೀನಷ್ಟು ಕಾಮಗಾರಿ ಪ್ರಗತಿಯಲ್ಲಿದ್ದರೆ ಯಾದವಾಡದಿಂದ ಜಮಖಂಡಿವರೆಗಿನ 28 ಕಿ.ಮೀ.ನಷ್ಟು ಕಾರ್ಯ ಇನ್ನೂ ನಡೆದಿಲ್ಲ. ಕಳೆದ ತಿಂಗಳಷ್ಟೇ ಹೋರಾಟ ಸಮಿತಿಯಿಂದ ಕುಡಚಿಯಲ್ಲಿ ಸತ್ಯಾಗ್ರಹ ನಡೆಸಿದ್ದರ ಫಲವಾಗಿ ಕುಡಚಿಯಿಂದ-ಜಮಖಂಡಿವರೆಗಿನ ೫೧ ಕಿ.ಮೀ. ಕೆಲಸ ಪ್ರಾರಂಭಿಸುವುದಾಗಿ ಜನಪ್ರತಿನಿಧಿಗಳ ಆಶ್ವಾಸನೆಯಿಂದ ಸತ್ಯಾಗ್ರಹ ಕೈ ಬಿಡಲಾಗಿತ್ತು. ಆದರೆ ಆ ಕಾರ್ಯವೂ ಮಂದಗತಿಯಲ್ಲಿಯೇ ಸಾಗುತ್ತಿದೆ.&lt;/p&gt;&lt;h2&gt;₹೬.೫ ಕೋಟಿ ವೆಚ್ಚದಲ್ಲಿ ಟೆಂಡರ್&lt;/h2&gt;&lt;p&gt;೨ ವರ್ಷಗಳ ಹಿಂದೆಯೇ ಕುಡಚಿ-ಜಮಖಂಡಿವರೆಗಿನ ಭೂಸ್ವಾಧೀನ ಪ್ರದೇಶದ ಸ್ವಚ್ಛತೆ ಹಾಗೂ ಜಾಗ ಗುರುತು ಬಗ್ಗೆ ₹೬.೫ ಕೋಟಿ ವೆಚ್ಚದಲ್ಲಿ ಟೆಂಡರ್ ಆಗಿದ್ದರೂ ಗುತ್ತಿಗೆದಾರ ಮಾತ್ರ ಇನ್ನೂ ಕಾರ್ಯ ನಡೆಸಿಲ್ಲ.&lt;/p&gt;&lt;p&gt;ರಾಜ್ಯ ಸರ್ಕಾರದಿಂದ ನಡೆಯಬೇಕಿದ್ದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಕೇಂದ್ರ ರೈಲ್ವೆ ಇಲಾಖೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿಯೋಜನೆ ಮಾಡದಿರುವುದೇ ನಿರ್ಲಕ್ಷ್ಯಕ್ಕೆ ಕಾರಣ ಎನ್ನಲಾಗಿದೆ.&lt;/p&gt;&lt;h2&gt;ಸಮಿತಿ ಸುಸ್ತು, ಜನಬೆಂಬಲದ ಕೊರತೆ:&amp;nbsp;&lt;/h2&gt;&lt;p&gt;ರೈಲ್ವೆ ಹೋರಾಟ ಸಮಿತಿ ಕಳೆದೆರಡು ದಶಕಗಳಿಂದ ಹೋರಾಟ ನಡೆಸುತ್ತ ಇದೀಗ ಸುಸ್ತಿನ ಹಾದಿ ತುಳಿಯುತ್ತಿದೆ. ಆಯಾ ತಾಲೂಕಾಧ್ಯಕ್ಷರ ನೇತೃತ್ವದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ ಕಾರಣ ಇಂದು ರೈಲು ಮಾರ್ಗ ಚುರುಕು ಪಡೆದುಕೊಂಡಿತ್ತು. ಕಳೆದೆರಡು ವರ್ಷಗಳಿಂದ ಹೋರಾಟದ ಬಿಸಿ ಕಡಿಮೆಯಾಗಿದ್ದಲ್ಲದೆ ಹೋರಾಟಗಾರರಿಗೆ ಜನತೆಯ ಬೆಂಬಲ ಕಡಿಮೆಯಾಗಿರುವುದು ಕಾಮಗಾರಿ ಹಿನ್ನೆಡೆಗೆ ಕಾರಣ ಎನ್ನಲಾಗುತ್ತಿದೆ.&lt;/p&gt;&lt;p&gt;ವಿನೂತನ ಹೋರಾಟಕ್ಕೆ ಅಣಿ : ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದೀನ್ ಖಾಜಿ ಪತ್ರಿಕೆಯೊಂದಿಗೆ ಮಾತನಾಡಿ, ಈಗಾಗಲೇ ಎಲ್ಲ ರೀತಿಯಲ್ಲಿ ಹೋರಾಟ ನಡೆಸಲಾಗಿದೆ. ಮತ್ತೊಂದು ಬಾರಿ ವಿನೂತನ ಶೈಲಿಯಲ್ಲಿ ಹೋರಾಟ ನಡೆಸುವ ಮೂಲಕ ಈ ಬಾರಿ ಕುಡಚಿ-ಬಾಗಲಕೋಟೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಹೋರಾಟ ನಿರಂತರವೆಂದು ತಿಳಿಸಿದರು.&lt;/p&gt;&lt;p&gt;ಹೋರಾಟ ಸಮಿತಿಗೆ ನಾಗರಿಕರ ಬೆಂಬಲ ಕಡಿಮೆಯಾಗುತ್ತಿರುವುದು ಬೇಸರ ತಂದಿದೆ. ಆದರೂ ರೈಲು ಮಾರ್ಗ ಶೀಘ್ರ ಮುಕ್ತಾಯಗೊಳ್ಳಬೇಕು. ಅಲ್ಲಿಯವರೆಗೂ ಹೋರಾಟ ಸಮಿತಿ ಹೋರಾಟದ ಕಾವು ಇರಲಿದೆ.&lt;/p&gt;&lt;p&gt;-ಕುತ್ಬುದ್ದೀನ್ ಖಾಜಿ, ಅಧ್ಯಕ್ಷರು, ರೈಲು ಹೋರಾಟ ಸಮಿತಿ ಬಾಗಲಕೋಟೆ&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/kudachi-bagalkot-railway-line-project-faces-delays-again-only-41-km-completed-in-over-a-decade-gdp/articleshow-rni4k5p"/>
        </item>
        <item>
            <title><![CDATA[Bagalkote By-election 2026: ಬಾಗಲಕೋಟೆ ಉಪಕದನ, ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರ]]></title>
            <link>https://kannada.asianetnews.com/politics/bagalkote-by-election-2026-preparation-of-election-staff-rav/articleshow-uqahpkf</link>
            <guid isPermaLink="true">https://kannada.asianetnews.com/politics/bagalkote-by-election-2026-preparation-of-election-staff-rav/articleshow-uqahpkf</guid>
            <pubDate>Thu, 09 Apr 2026 08:10:23 +0530</pubDate>
            <description><![CDATA[&lt;p&gt;ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಗುರುವಾರ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಜಿಲ್ಲಾಡಳಿತ ಶಾಂತಿಯುತ ಮತದಾನಕ್ಕಾಗಿ 322 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಚುನಾವಣಾ ಸಿಬ್ಬಂದಿ ಅಗತ್ಯ ಸಾಮಗ್ರಿಗಳೊಂದಿಗೆ ತಮ್ಮ ಕರ್ತವ್ಯಕ್ಕೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knph3gsnw24v2sx96mpar65y,imgname-karnataka-bye-election-2026-bgk-1775651373877.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.9)&lt;/strong&gt;: ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಗುರುವಾರ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಹಣೆಬರಹವನ್ನು ಮತದಾರ ಪ್ರಭು ಮತ ಚಲಾಯಿಸುವ ಮೂಲಕ ಬರೆಯಲಿದ್ದಾನೆ. ಕಳೆದ ಒಂದು ವಾರದಿಂದ ತುರಿಸಿನಿಂದ ನಡೆದಿದ್ದ ಪ್ರಚಾರ ಬುಧವಾರ ಶಾಂತಗೊಂಡಿತ್ತು. ಹೊರಗಿನ ಮುಖಂಡರು, ಕಾರ್ಯಕರ್ತರು ಕ್ಷೇತ್ರ ತೊರೆದರೆ ಅಭ್ಯರ್ಥಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕೊನೆಯ ಹಂತದ ಪ್ರಯತ್ನ ನಡೆಸಿದರು.ಏ.9ರಂದು ಮತದಾನ ನಡೆಯಲಿದ್ದು, ನವನಗರದ ಸೆಕ್ಟರ್&zwnj; ನಂ.43ರಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು.&lt;/p&gt;&lt;p&gt;ಗುರುವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಚುನಾವಣೆ ಕರ್ತವ್ಯ ನಿರ್ವಹಿಸಲಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇವಿಎಂ ಮಷೀನ್&zwnj; ಸೇರಿ ಅಗತ್ಯ ವಸ್ತುಗಳೊಂದಿಗೆ ತಮ್ಮ ತಮ್ಮ ಮತಗಟ್ಟೆಗಳಿಗೆ ಬುಧವಾರ ಸಂಜೆ ಪ್ರಯಾಣ ಬೆಳೆಸಿದರು.&lt;/p&gt;&lt;h2&gt;ಸಿದ್ಧತೆ ಪರಿಶೀಲನೆ:&lt;/h2&gt;&lt;p&gt;ಮಸ್ಟರಿಂಗ್ ಕಾರ್ಯದ ಮಾಹಿತಿ ಪಡೆದುಕೊಂಡ ಸಾಮಾನ್ಯ ವೀಕ್ಷಕರು ಸಿದ್ಧತೆಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ಚುನಾವಣೆ ಸಾಮಗ್ರಿ, ಸಿದ್ಧತಾ ಕೊಠಡಿಗಳಿಗೆ ತೆರಳಿ ಆಯೋಗದ ಮಾರ್ಗಸೂಚಿ ಪಾಲಿಸಿ ಕರ್ತವ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು. ಮತದಾನಕ್ಕೆ ಬೇಕಾದ ಎಲ್ಲ ಅಗತ್ಯ ಸಾಮಗ್ರಿ ಪರಿಶೀಲಿಸಿಕೊಂಡು ಮತಗಟ್ಟೆಗೆ ತೆರಳಲು ತಿಳಿಸಿದರು. ಮತಗಟ್ಟೆ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದ ಅವರು ಚುನಾವಣೆ ಕಾರ್ಯಗಳು ನಿಯಮಾನುಸಾರ ಹಾಗೂ ಅಡಚಣೆಗಳಿಲ್ಲದೆ ನಡೆಯುವಂತೆ ಸೂಚನೆ ನೀಡಿದರು. ನಂತರ ಚುನಾವಣೆ ಸಾಮಗ್ರಿಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಿದರು.&lt;/p&gt;&lt;p&gt;ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆದ ಸಂಗಪ್ಪ ಮಾತನಾಡಿ, ಉಪ ಬಾಗಲಕೋಟೆ ಚುನಾವಣೆಗೆ 2,59,797 ಜನ ಮತ ಚಲಾಯಿಸಲಿದ್ದು, 322 ಮತಗಟ್ಟೆ ಸ್ಥಾಪಿಸಲಾಗಿದೆ. ಕಾಯ್ದಿರಿಸಿದ ಸಿಬ್ಬಂದಿ ಒಳಗೊಂಡಂತೆ 1564 ಮತಗಟ್ಟೆ ಸಿಬ್ಬಂದಿ ನಿಯೋಜಿಸಲಾಗಿದೆ. ಮತಗಟ್ಟೆ ಸಿಬ್ಬಂದಿ ಆಯಾ ಮತಗಟ್ಟೆಗಳಿಗೆ ತೆರಳಲು 35 ಬಸ್, 9 ಮಿನಿ ಬಸ್&zwnj;ಗಳು, 11 ಮ್ಯಾಕ್ಸಿಕ್ಯಾಬ್, 10 ಟ್ರಾಕ್ಸ್ ವಾಹನಗಳಲ್ಲಿ ಸಂಜೆ ಮತಗಟ್ಟೆಗಳಿಗೆ ತೆರಳಿದರು.&lt;/p&gt;&lt;p&gt;ಜಿಪಂ ಸಿಇಒ ಶಶಿಧರ ಕುರೇರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮತದಾನಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳ ವಿತರಣೆ ಕಾರ್ಯ ವೀಕ್ಷಣೆ ಮಾಡಿದರು. ತಮಗೆ ನೀಡಲಾದ ಸಾಮಗ್ರಿಗಳನ್ನು ಚೆಕ್ ಲಿಸ್ಟ್ ಪ್ರಕಾರ ಪರೀಕ್ಷಿಸಿಕೊಂಡು ಮತಗಟ್ಟೆಗೆ ತೆರಳಲು ತಿಳಿಸಿದರು. ವೈದ್ಯಕೀಯ ಸೌಲಭ್ಯ ಒದಗಿಸಿದ್ದು, ಅದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಚುನಟ್ಣೆಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.&lt;/p&gt;&lt;p&gt;ಭೇಟಿ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ್&zwnj; ವಾಸುದೇವ ಸ್ವಾಮಿ, ಡಾ.ಪ್ರದೀಪಕುಮಾರ ಸೇರಿದಂತೆ ಇತರರು ಇದ್ದರು.&lt;/p&gt;&lt;p&gt;ಚುನಾವಣೆ ಕಾರ್ಯಕ್ಕೆ ನಿಯೋಜಿಸಿದ ಮತಗಟ್ಟೆ ಸಿಬ್ಬಂದಿಗೆ ಬೆಳಗಿನ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸವಿದು ತಮ್ಮ ತಮ್ಮ ಕೇಂದ್ರಗಳಿಗೆ ತೆರಳಿದರು. ಚುನಾವಣೆ ಪ್ರಕ್ರಿಯೆ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸಿಬ್ಬಂದಿ ಅಗತ್ಯ ಸಾಮಗ್ರಿಗಳೊಂದಿಗೆ ನಿಯೊಜಿತ ಮತಗಟ್ಟೆಗಳಿಗೆ ತೆರಳಿದರು.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bagalkote-by-election-2026-preparation-of-election-staff-rav/articleshow-uqahpkf"/>
        </item>
        <item>
            <title><![CDATA[ಇಳಕಲ್ ನಿವಾಸಿ ಭಕ್ತ ಮಹಮ್ಮದ್‌ ಮನೆಗೆ ಭೇಟಿ ನೀಡಿದ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು]]></title>
            <link>https://kannada.asianetnews.com/karnataka-districts/koppal-gavisiddeshwara-sri-visited-the-house-of-muslim-bhakta-raja-mohammed-a-resident-of-ilakal-bagalkote-mrq/articleshow-yctkauz</link>
            <guid isPermaLink="true">https://kannada.asianetnews.com/karnataka-districts/koppal-gavisiddeshwara-sri-visited-the-house-of-muslim-bhakta-raja-mohammed-a-resident-of-ilakal-bagalkote-mrq/articleshow-yctkauz</guid>
            <pubDate>Tue, 14 Apr 2026 10:56:09 +0530</pubDate>
            <description><![CDATA[ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಇಳಕಲ್ಲ ನಗರದ ಮುಸ್ಲಿಂ ಭಕ್ತ ರಾಜ ಮಹಮ್ಮದ್&zwnj; ಅವರ ಮನೆಗೆ ಅನಿರೀಕ್ಷಿತ ಭೇಟಿ ನೀಡಿ ಸೌಹಾರ್ದತೆ ಮೆರೆದರು. ಈ ಸಂದರ್ಭದಲ್ಲಿ ಸಮಾಜವನ್ನು ಜಾತಿಯ ಬದಲಿಗೆ ನೀತಿಯ ಮೇಲೆ ಕಟ್ಟಬೇಕು ಎಂದು ಅವರು ಕರೆ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kp56r2xyapcxhpdw3bzj08xe,imgname-gavi-siddeshwar-swamiji-1776143829950.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಇಳಕಲ್ಲ ನಗರದ ಮುಸ್ಲಿಂ ಸಮಾಜದ ಯುವ ಮುಖಂಡ ರಾಜ ಮಹಮ್ಮದ್&zwnj; ಮನೆಗೆ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಆಕಸ್ಮಿಕ ಭೇಟಿ ನೀಡಿ ಅಚ್ಚರಿ ಮೂಡಿಸಿದರು.&lt;/p&gt;&lt;p&gt;ಇಳಕಲ್ಲದ ರಾಜ ಮಹಮ್ಮದ್&zwnj; ಕೊಪ್ಪಳದ ಗವಿಸಿದ್ದೇಶ್ವರ ಮಠದ ಪರಮ ಭಕ್ತರು. ಕೊಪ್ಪಳ ಶ್ರೀಮಠಕ್ಕೆ ಹೋದಾಗ ಒಂದು ಬಾರಿ ನಮ್ಮ ಮನೆಗೆ ಆಗಮಿಸುವಂತೆ ಆಗಾಗ ಮನವಿ ಮಾಡುತ್ತಿದ್ದರು. ಶ್ರೀಗಳು ಇಳಕಲ್ಲ ನಗರದ ಮೂಲಕ ಕೊಪ್ಪಳಕ್ಕೆ ಪ್ರಯಾಣಿಸುವಾಗ ರಾಜು ಅವರ ನೆನಪಾಗಿ ವಾಹನವನ್ನು ಇಳಕಲ್ಲ ನಗರದ ರಾಜು ಮಹಮ್ಮದ ಮನೆಯತ್ತ ಹೋಗಲು ತಿಳಿಸಿದರು. ಶ್ರೀಗಳು ಮನೆಗೆ ಬರುತ್ತಿರುವುದನ್ನು ಕೇಳಿ ರಾಜು ಮಹಮ್ಮದ್&zwnj; ಹಾಗೂ ಕುಟುಂಬದವರ ಸಂತಸ ಹೇಳತಿರದು. ಮನೆಗೆ ಬಂದ ಶ್ರೀಗಳನ್ನು ಸ್ವಾಗತಿಸಿಕೊಂಡ ರಾಜು ಕುಟುಂಬದ ಪರವಾಗಿ ಗೌರವ ಸತ್ಕಾರ ಮಾಡಿದರು. ರಾಜು ಮಹಮ್ಮದ್ ಸಮಾಜ ಸೇವೆಗೆ ಶ್ರೀಗಳು ಶ್ರೀಮಠದ ಪರವಾಗಿ ರಾಜು ಮಹಮ್ಮದಗೆ ಗೌರವಿಸಿ ಸತ್ಕರಿಸಿದರು.&lt;/p&gt;&lt;p&gt;&lt;strong&gt;ನೀತಿಯ ಮೇಲೆ ಸಮಾಜ ಕಟ್ಟಲಿ: ಗವಿ ಶ್ರೀ&lt;/strong&gt;&lt;/p&gt;&lt;p&gt;ಜಾತೀಯತೆ ಮೇಲೆ ಸಮಾಜ ಕಟ್ಟುವ ಬದಲು ನೀತಿಯ ಮೇಲೆ ಸಮಾಜ ಕಟ್ಟುವ ಅವಶ್ಯಕತೆ ಇದೆ ಎಂದು ಕೊಪ್ಪಳ ಗವಿ ಮಠದ ಅಭಿನವ ಗವಿಸಿದ್ದೇಶ್ವರ ಶ್ರೀ ಅಭಿಪ್ರಾಯಪಟ್ಟರು. ಪಟ್ಟಣದ ಜಗದಂಬಾ ದೇಗುಲದ ಕಳಸಾರೋಹಣದ ಹಿನ್ನಲೆಯಲ್ಲಿ ಸೋಮವಾರ ದೇಗುಲಕ್ಕೆ ಭೇಟಿ ನೀಡಿ ಕಳಸಾರೋಹಣದ ಸಿದ್ಧತೆಯ ಧಾರ್ಮಿಕ ವಿಧಿ ವಿಧಾನಗಳನ್ನು ಪರಿಶೀಲಿಸಿ ಮಾತನಾಡಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Koppal: ಗವಿಸಿದ್ದೇಶ್ವರ ಮಠದ ಶಾಖೆಗಳಿಗೆ ಉತ್ತರಾಧಿಕಾರಿಗಳ ನೇಮಕ&lt;/strong&gt;&lt;/p&gt;&lt;p&gt;ಮಕ್ಕಳಿಗೆ ಶಿಕ್ಷಣ ಒದಗಿಸಲು ಪೋಷಕರು ಸದಾ ಮುಂದಾಗಬೇಕು. ಶಿಕ್ಷಣದ ಜೊತೆಗೆ ಜೀವನದ ಪಾಠ ಕಲಿಸುವಲ್ಲಿ ಪೋಷಕರು ಎಚ್ಚರ ವಹಿಸಬೇಕು. ಸಹೋದರತೆ ಮತ್ತು ಪರಸ್ಪರರಲ್ಲಿ ಬಾಂಧವ್ಯ ವೃದ್ಧಿಯಾಗಲಿ ಎಂದು ಹಾರೈಸಿದರು. ಶ್ರೀಗಳ ಪಾದಪೂಜೆ ನೆರವೇರಿಸಿದ ಸಮಾಜದ ಅಧ್ಯಕ್ಷ ದೀಪಕ್ ಕಠಾರೆ ಪ್ರಾಸ್ತಾವಿಕವಾಗಿ ಮಾತನಾಡಿ, ದೇಗುಲ ನಿರ್ಮಾಣದ ಹಿಂದೆ ಸಮಾಜ ಬಾಂಧವರ ಶ್ರಮವಿದೆ. ಮುಂದಿನ ದಿನಗಳಲ್ಲಿ ಸಹಸ್ರಾರ್ಜುನ ಭವನ ನಿರ್ಮಾಣಕ್ಕೆ ಶಾಸಕರ ಅನುದಾನ ಒದಗಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Gavi Mutt: 15 ಕಿ.ಮೀ ದೂರದಿಂದ ಗವಿಮಠಕ್ಕೆ ಅರ್ಧ ಕ್ವಿಂಟಲ್ ಅಕ್ಕಿ ಹೊತ್ತುಕೊಂಡು ಬಂದ ಭಕ್ತ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ದೂದಿಹಳ್ಳಿ ಗ್ರಾಮದ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ನಂದಿ ಮೂರ್ತಿ ಪತ್ತೆಯಾಗಿದೆ. ಮೂರ್ತಿ 3 ಅಡಿ ಎತ್ತರವಿದೆ. ಮೂರ್ತಿ ಸಿಗುತ್ತಿದ್ದಂತೆ ಗ್ರಾಮಸ್ಥರು ಶುಚಿಗೊಳಿಸಿದ್ದಾರೆ. ನಂತರ ಮೂರ್ತಿಗೆ ಗ್ರಾಮದ ಜನರು ಪೂಜೆ ಸಲ್ಲಿಸಿದ್ದಾರೆ.#Haveri #Lake #NandiIdol https://t.co/1wWrifi7TJ&lt;/p&gt;&lt;p&gt;&mdash; Asianet Suvarna News (@AsianetNewsSN) April 13, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/koppal-gavisiddeshwara-sri-visited-the-house-of-muslim-bhakta-raja-mohammed-a-resident-of-ilakal-bagalkote-mrq/articleshow-yctkauz"/>
        </item>
        <item>
            <title><![CDATA[ರಾಜ್ಯದಲ್ಲಿ ಎಸ್ಸಿ- ಎಸ್ಟಿ, ಒಬಿಸಿ ವಿರೋಧಿ ಸರ್ಕಾರ: ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ]]></title>
            <link>https://kannada.asianetnews.com/politics/mp-basavaraj-bommai-bagalakote-bypoll-speech-ambigara-community-gvd/articleshow-yugiyr1</link>
            <guid isPermaLink="true">https://kannada.asianetnews.com/politics/mp-basavaraj-bommai-bagalakote-bypoll-speech-ambigara-community-gvd/articleshow-yugiyr1</guid>
            <pubDate>Tue, 07 Apr 2026 11:18:42 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿರೋಧಿ ಸರ್ಕಾರ ಇದೆ. ಯಾರ ಮತ ಪಡೆದಿದ್ದಾರೋ ಅವರಿಗೆ ಅನ್ಯಾಯ ಮಾಡುವ ಸರ್ಕಾರ ಇದೆ. ಗಂಗಾಮತಸ್ಥರೇ, ಸುಶಿಕ್ಷಿತರಾದ ನೀವು ಎಲ್ಲಿರುತ್ತೇವೆ, ಅಲ್ಲಿ ಗೆಲುವಿದೆ ಎಂದು ತೋರಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gg5tvqcvn71xgbwsqj3akh7k,imgname-basavaraj-bommai.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.07): &lt;/strong&gt;ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿರೋಧಿ ಸರ್ಕಾರ ಇದೆ. ಯಾರ ಮತ ಪಡೆದಿದ್ದಾರೋ ಅವರಿಗೆ ಅನ್ಯಾಯ ಮಾಡುವ ಸರ್ಕಾರ ಇದೆ. ಗಂಗಾಮತಸ್ಥರೇ, ಸುಶಿಕ್ಷಿತರಾದ ನೀವು ಎಲ್ಲಿರುತ್ತೇವೆ, ಅಲ್ಲಿ ಗೆಲುವಿದೆ ಎಂದು ತೋರಿಸಿ. ಆಗ ಎಲ್ಲ ರಾಜಕೀಯ ಪಕ್ಷಗಳು ನಿಮ್ಮ ಬಾಗಿಲಿಗೆ ಬರುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಮ್ಮಣಗಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆಯ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.&lt;/p&gt;&lt;p&gt;ಅಂಬಿಗರ ಚೌಡಯ್ಯನವರ ಕುಲಬಾಂಧವರನ್ನು ನೋಡುವುದು ಬಹಳ ಸಂತೋಷವಾಗುತ್ತದೆ. ಅತ್ಯಂತ ಕಠಿಣ ಪರಿಶ್ರಮ ಪಡುವ ಕುಲ ಅದು. ಬಹಳಷ್ಟು ಸಾಹಸಮಯವಾಗಿ ಬದುಕು ನಡೆಸುವುದು ಅಂಬಿಗರ ಸಮುದಾಯ, ಬದುಕಿನ ಮೇಲೆ ಬಹಳ ವಿಶ್ವಾಸ ಇಟ್ಟವರು. ಹಡಗನ್ನು ನದಿಗೆ ಹಾಕಿದಾಗ ಅದು ದಡಕ್ಕೆ ತೆಗೆದುಕೊಂಡು ಹೋಗುತ್ತದೆ ಎನ್ನುವ ವಿಶ್ವಾಸ ನಾವಿಕ ಇಟ್ಟುಕೊಂಡಿರುತ್ತಾನೆ. ಅಲ್ಲದೆ ಗಾಳ ಹಾಕಿದರೆ ಇಂದು ಮೀನು ಸಿಗದಿದ್ದರೂ ನಾಳೆ ಸಿಗುತ್ತದೆ ಎನ್ನುವ ನಂಬಿಕೆಯಿಂದ ಬದುಕುವ ಸಮುದಾಯ. ಈ ಸಮುದಾಯ ಮುಂದೆ ಬರಬೇಕು ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಜ್ಞಾನದಿಂದ ಶಕ್ತಿ&lt;/strong&gt;&lt;/h2&gt;&lt;p&gt;ಒಂದು ಕಾಲದಲ್ಲಿ ಭೂಮಿ ಇದ್ದವರು ಜಗತ್ತು ಆಳಿದರು. ಅಲೆಕ್ಸಾಂಡರ್ ಜಗತ್ತನ್ನೇ ಆಳಬಯಸಿದ, ನಂತರ ಬ್ರಿಟಿಷರು ಅವರ ಬಳಿ ದುಡ್ಡಿತ್ತು, ಅವರು 139 ದೇಶ ಆಳಿದರು. 21ನೇ ಶತಮಾನದಲ್ಲಿ ಜ್ಞಾನ ಇದ್ದವರು ಜಗತ್ತು ಆಳುತ್ತಾರೆ. ನಿಮ್ಮ ಕಠಿಣ ಪರಿಶ್ರಮದ ಜೊತೆಗೆ ಜ್ಞಾನ ಕೊಟ್ಟರೆ ಜಗತ್ತನ್ನು ಆಳುತ್ತೀರಿ. ಇಡೀ ಜಗತ್ತಿನಲ್ಲಿ ಈ ಸಮಾಜ ಜ್ಞಾನ ಪಡೆದುಕೊಳ್ಳಬೇಕು. ಶಿಕ್ಷಣವಂತರಾದರೆ ನಿಮ್ಮ ಕೈ ಯಾವಾಗಲೂ ಭೂಮಿ ನೋಡುತ್ತದೆ. ಬೇಡುವ ಕೈ ಆಕಾಶ ಕಡೆಗೆ ನೋಡುತ್ತದೆ. ನೀಡುವ ಕೈ ಭೂಮಿಯ ಕಡೆಗೆ ನೋಡುತ್ತದೆ. ಜ್ಞಾನ ಪಡೆದುಕೊಳ್ಳಿ ನಿಮಗೂ ನೀಡುವ ಶಕ್ತಿ ಬರುತ್ತದೆ ಎಂದು ಹೇಳಿದರು.&lt;/p&gt;&lt;p&gt;ಈ ವೇಳೆ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ, ಹನುಂಮತ ನಿರಾಣಿ, ಮಾಜಿ ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ, ರಮೇಶ ಭೂಸನೂರ, ಸೋಮನಗೌಡ ಪಾಟೀಲ, ಮುಖಂಡರಾದ ಅವ್ವಣ್ಣ ಮ್ಯಾಕೇರಿ, ರಾಮಣ್ಣ ಬಮ್ಮಳಗಿ, ನಾಗಪ್ಪ ಅಂಬಿ, ಗುರು ತಳವಾರ, ಯಲ್ಲಪ್ಪ ಯಡಳ್ಳಿ, ವೆಂಕಟೇಶ ಉಪ್ಪಾರ ಸೇರಿದಂತೆ ಅಂಬಿಗೇರ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mp-basavaraj-bommai-bagalakote-bypoll-speech-ambigara-community-gvd/articleshow-yugiyr1"/>
        </item>
        <item>
            <title><![CDATA[ನಾನು ಯಾರಿಗಾದ್ರೂ ದ್ರೋಹ ಮಾಡಿದ್ರೆ ಹೇಳಲಿ; ವಿಶ್ವಾಸ ದ್ರೋಹಿ ಎಂದ ಬಿಎಸ್‌ವೈಗೆ ಸಿಎಂ ಸಿದ್ದರಾಮಯ್ಯ ತಿರುಗೇಟು]]></title>
            <link>https://kannada.asianetnews.com/politics/bagalkote-election-2026-cm-siddaramaiah-hits-back-at-bsy-for-calling-him-a-traitor/articleshow-ztmt17f</link>
            <guid isPermaLink="true">https://kannada.asianetnews.com/politics/bagalkote-election-2026-cm-siddaramaiah-hits-back-at-bsy-for-calling-him-a-traitor/articleshow-ztmt17f</guid>
            <pubDate>Tue, 07 Apr 2026 07:48:28 +0530</pubDate>
            <description><![CDATA['ನಂಬಿಕೆ ದ್ರೋಹಿ' ಎಂಬ ಯಡಿಯೂರಪ್ಪನವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆಧಾರವಿದ್ದರೆ ಮಾತನಾಡಲಿ ಎಂದು ಸವಾಲು ಹಾಕಿರುವ ಅವರು, ಯಡಿಯೂರಪ್ಪನವರ ಮೇಲೆಯೇ ಅವರ ಪಕ್ಷದವರಿಂದ ಬಂದಿದ್ದ ಭ್ರಷ್ಟಾಚಾರ ಆರೋಪಗಳನ್ನು ನೆನಪಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಏ.7): &lt;/strong&gt;ನಂಬಿಕೆ ದ್ರೋಹ, ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, &lsquo;ನಾನು ಯಾರಿಗಾದರೂ ದ್ರೋಹ ಮಾಡಿದ್ರೆ ಹೇಳಲಿ, ಸುಮ್ಮ ಸುಮ್ಮನೆ ಹೇಳಿ ಬಿಟ್ರೆ ಹೇಗೆ?&rsquo; ಎಂದು ಪ್ರಶ್ನಿಸಿದ್ದಾರೆ. &lsquo;ಆಧಾರ ಇದ್ದರೆ ಮಾತನಾಡಿ, ಸುಮ್ಮನೆ ಮಾತನಾಡೋದಲ್ಲ. ನನ್ನ ಜೀವನದಲ್ಲಿ ಆ ತರಹ ಮಾತನಾಡಿಲ್ಲ. ನಾನು ಆಧಾರ ಸಹಿತ ಮಾತನಾಡೋನು, ಆಧಾರ ಇಲ್ಲದೆ ಇದ್ದರೆ ಆಧಾರ ರಹಿತ ಆಗುತ್ತೆ, ಅದಕ್ಕೆ ಯಾವ ಕಿಮ್ಮತ್ತೂ ಇರಲ್ಲ&rsquo; ಎಂದಿದ್ದಾರೆ.&lt;/p&gt;&lt;h2&gt;- ವಿಶ್ವಾಸ ದ್ರೋಹಿ ಎಂದ ಬಿಎಸ್&zwnj;ವೈಗೆ ಸಿಎಂ ಸಿದ್ದರಾಮಯ್ಯ ತಿರುಗೇಟು&lt;/h2&gt;&lt;p&gt;- ಹಾಗಾದ್ರೆ ಬಿಎಸ್&zwnj;ವೈ ಕಳ್ಳ, ಭ್ರಷ್ಟರಾ?&lt;/p&gt;&lt;p&gt;ಸೋಮವಾರ ಬಾಗಲಕೋಟೆಯ ಹೆಲಿಪ್ಯಾಡ್&zwnj;ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, &lsquo;ಯಡಿಯೂರಪ್ಪ ಅವರನ್ನು ನಾನು ಕಳ್ಳ ಅಂತೀನಿ, ಭ್ರಷ್ಟ ಅಂತೀನಿ. ನಾನು ಹೇಳಿದಾಕ್ಷಣ ಅವರು ಕಳ್ಳ, ಭ್ರಷ್ಟ ಆಗುತ್ತಾರಾ?. ಸುಮ್ಮ ಸುಮ್ಮನೆ ಹೇಳೋದಲ್ಲ. ಅವರಿಗೆ ವಯಸ್ಸಾದ ಮೇಲೆ ಅರಳು-ಮರಳು ಆಗಿದೆ. ಅವರ ಕಾಲದಲ್ಲಿ ಭ್ರಷ್ಟ ಎಂದು ಯಾರನ್ನು ಕರೆದರು?. ಯಾರನ್ನು ಯತ್ನಾಳ ಭ್ರಷ್ಟ ಎಂದು ಕರೆದರು?. ಹಾಗಾದರೆ, ಯಡಿಯೂರಪ್ಪನವರು ಭ್ರಷ್ಟ ಅಲ್ವಾ?. ಇದು ನಾನು ಹೇಳಿದ್ದಲ್ಲ, ಅವರ ಪಕ್ಷದ ಮನುಷ್ಯನೇ ಹೇಳಿರೋದು. ವಿಶ್ವನಾಥ ಅವರೂ ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದರು. ಅವರ ಪಕ್ಷದವರೇ ಅವರ ಮೇಲೆ ಆರೋಪ ಮಾಡಿದರೆ ಸುಳ್ಳಾ, ನಿಜಾನೋ?&rsquo; ಎಂದು ಪ್ರಶ್ನೆ ಮಾಡಿದರು.&lt;/p&gt;&lt;p&gt;ಸ್ವಜಾತಿಯ ಅಭ್ಯರ್ಥಿ ಆಗಿರುವ ಕಾರಣ ಸಿಎಂ ಬಾಗಲಕೋಟೆಗೆ ಪ್ರಚಾರಕ್ಕೆ ಬಂದಿದ್ದಾರೆ ಎಂಬ ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಯಾವ ಜಾತಿ?. ಯಾರ ಪರ ಪ್ರಚಾರ ಮಾಡುತ್ತಿದ್ದಾರೆ?. ಅವರು ಉಮೇಶ ಮೇಟಿ ಪರ ಪ್ರಚಾರ ಮಾಡುತ್ತಿದ್ದಾರಾ?. ಚರಂತಿಮಠ ಯಾವ ಜಾತಿ?. ಚರಂತಿಮಠ ಲಿಂಗಾಯತರು, ಹಾಗಾದರೆ ಅವರು ಮಾಡುತ್ತಿರೋದೇನು?. ಉಮೇಶ ಮೇಟಿ ನಮ್ಮ ಪಕ್ಷದ ಅಭ್ಯರ್ಥಿ. ಹಾಗಾಗಿ ಪ್ರಚಾರ ಮಾಡ್ತೀನಿ, ದಾವಣಗೆರೆಯಲ್ಲಿ ಲಿಂಗಾಯತ ಅಭ್ಯರ್ಥಿ ಇದ್ದಾರೆ. ಅಲ್ಲಿಗೆ ಪ್ರಚಾರಕ್ಕೆ ಹೋಗಿಲ್ವಾ?.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bagalkote-election-2026-cm-siddaramaiah-hits-back-at-bsy-for-calling-him-a-traitor/articleshow-ztmt17f"/>
        </item>
    </channel>
</rss>
