<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 24 Apr 2026 20:12:43 +0530</lastBuildDate>
        <atom:link href="https://kannada.asianetnews.com/rss/ballari" rel="self" type="application/rss+xml"/>
        <item>
            <title><![CDATA[ಜೀವಾವಧಿ ಶಿಕ್ಷೆಗೊಳಗಾದ ಕೈದಿಗೆ ಪಿಯುಸಿ ಪರೀಕ್ಷೆಯಲ್ಲಿ 80.16% ಅಂಕ!]]></title>
            <link>https://kannada.asianetnews.com/state/life-convict-scores-80-percents-in-puc-exam-2026-ballari-rav/articleshow-29ex57r</link>
            <guid isPermaLink="true">https://kannada.asianetnews.com/state/life-convict-scores-80-percents-in-puc-exam-2026-ballari-rav/articleshow-29ex57r</guid>
            <pubDate>Fri, 10 Apr 2026 09:53:39 +0530</pubDate>
            <description><![CDATA[&lt;p&gt;ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಎಸ್. ಅಶೋಕ್&zwnj; ಕುಮಾರ್&zwnj; ಎಂಬ ಕೈದಿ, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಜೈಲಿನ ಅಧಿಕಾರಿಗಳ ಸಹಕಾರದಿಂದ ದೂರ ಶಿಕ್ಷಣದ ಮೂಲಕ ಈ ಸಾಧನೆ ಮಾಡಿರುವ ವಿದ್ಯಾರ್ಥಿ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kntsn0c4m5vkw3kssp7kf3sr,imgname-----------------------2026-04-10t094526.126-1775794553220.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬಳ್ಳಾರಿ (ಏ.10): &lt;/strong&gt;ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿದ್ದಾನೆ.&lt;/p&gt;&lt;p&gt;ಬೆಂಗಳೂರು ಮೂಲದ ಎಸ್&zwnj;. ಅಶೋಕ್&zwnj; ಕುಮಾರ್&zwnj; ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 9 ವರ್ಷಗಳಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್&zwnj; ಕುಮಾರ್&zwnj; ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ.&amp;nbsp;&lt;/p&gt;&lt;p&gt;ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು, ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಜೈಲಿನಲ್ಲಿಯೇ ಕೈದಿಗೆ ಅಗತ್ಯ ಪಠ್ಯಪುಸ್ತಕಗಳನ್ನು ಒದಗಿಸಿ, ಅಭ್ಯಾಸಕ್ಕಾಗಿ ಪ್ರತ್ಯೇಕ ಕೊಠಡಿ ಸೌಲಭ್ಯ ಕಲ್ಪಿಸಲಾಗಿತ್ತು. ಜೈಲಿನಲ್ಲಿಯೇ ಸ್ವಯಂ ಅಭ್ಯಾಸದ ಮೂಲಕ ಅಂತಿಮವಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಫಲಿತಾಂಶ ಪಡೆದು ಗಮನ ಸೆಳೆದಿದ್ದಾರೆ.&amp;nbsp;&lt;/p&gt;&lt;p&gt;ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೆ ಅವಕಾಶ ಮಾಡಿಕೊಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/life-convict-scores-80-percents-in-puc-exam-2026-ballari-rav/articleshow-29ex57r"/>
        </item>
        <item>
            <title><![CDATA[ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಉರುಳಿದ ಕಾರು]]></title>
            <link>https://kannada.asianetnews.com/gallery/state/bellary-driver-loses-control-of-car-and-falls-off-bridge-3gfy8ra</link>
            <guid isPermaLink="true">https://kannada.asianetnews.com/gallery/state/bellary-driver-loses-control-of-car-and-falls-off-bridge-3gfy8ra</guid>
            <pubDate>Tue, 21 Apr 2026 10:00:54 +0530</pubDate>
            <description><![CDATA[&lt;p&gt;Andral Ballari road accident: ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ. ಕಾರಿನಲ್ಲಿದ್ದ ಏಕೈಕ ವ್ಯಕ್ತಿಯಾದ ಚಾಲಕನನ್ನು ಸ್ಥಳೀಯರು ರಕ್ಷಿಸಿ, ಚಿಕಿತ್ಸೆಗಾಗಿ ವೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpq4cyym9q6pzgtyethscne5,imgname-ballari-accident--3--1776745348052.jpg" type="image/jpeg" height="390" width="690"/>
            <content:encoded><![CDATA[&lt;p&gt;Andral Ballari road accident: ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ. ಕಾರಿನಲ್ಲಿದ್ದ ಏಕೈಕ ವ್ಯಕ್ತಿಯಾದ ಚಾಲಕನನ್ನು ಸ್ಥಳೀಯರು ರಕ್ಷಿಸಿ, ಚಿಕಿತ್ಸೆಗಾಗಿ ವೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ಬಳ್ಳಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ಆತನನ್ನು ಸ್ಥಳೀಯರು ರಕ್ಷಿಸಿ ವೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಕಾರು ಕಣೆಕಲ್ಲು ಬಸ್ ನಿಲ್ದಾಣದ ಕಡೆಯಿಂದ ಅಂದ್ರಳ್ ಕಡೆಗೆ ಚಲಿಸುತ್ತಿತ್ತು. ವೇಗವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಯಿಂದ ಹಳ್ಳಕ್ಕೆ ಉರುಳಿದೆ.&amp;nbsp;&lt;/p&gt;&lt;img&gt;&lt;p&gt;ಅಂದ್ರಳ್ ಬಳಿ ಇರುವ ಬೃಹತ್ ಹಳ್ಳಕ್ಕೆ ಕಾರು ಬಿದ್ದಿದ್ದು, ಕೂಡಲೇ ಸ್ಥಳೀಯರು ಕಾರು ಚಾಲಕನನ್ನು ರಕ್ಷಿಸಿ ಜೀವ ಉಳಿಸಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/bellary-driver-loses-control-of-car-and-falls-off-bridge-3gfy8ra"/>
        </item>
        <item>
            <title><![CDATA[ಇಸ್ರೇಲ್-ಇರಾನ್ ಯುದ್ಧದಿಂದ ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ದೊಡ್ಡ ಹೊಡೆತ!  ರಫ್ತು ಸ್ಥಗಿತ, ಕಚ್ಚಾ ವಸ್ತುಗಳ ಕೊರತೆ, ನೆಲಕಚ್ಚಿದ ಬ್ಯುಸಿನೆಸ್!]]></title>
            <link>https://kannada.asianetnews.com/karnataka-districts/israel-iran-war-hits-ballari-jeans-industry-exports-halted-raw-material-shortage-rav/articleshow-3pph7sz</link>
            <guid isPermaLink="true">https://kannada.asianetnews.com/karnataka-districts/israel-iran-war-hits-ballari-jeans-industry-exports-halted-raw-material-shortage-rav/articleshow-3pph7sz</guid>
            <pubDate>Tue, 17 Mar 2026 10:44:32 +0530</pubDate>
            <description><![CDATA[ಇಸ್ರೇಲ್&zwnj;-ಇರಾನ್ ಯುದ್ಧದಿಂದಾಗಿ ಬಳ್ಳಾರಿಯ ಪ್ರಸಿದ್ಧ ಜೀನ್ಸ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ವಿದೇಶಗಳಿಗೆ ಆಗುತ್ತಿದ್ದ ರಫ್ತು ಸ್ಥಗಿತಗೊಂಡಿದ್ದು, ಕಚ್ಚಾ ಪದಾರ್ಥಗಳ ಆಮದು ನಿಂತುಹೋಗಿದೆ. ಇದರಿಂದಾಗಿ ಹಬ್ಬದ ಸೀಸನ್&zwnj;ನಲ್ಲೂ ಬೇಡಿಕೆ ಕುಸಿದು, ಉದ್ಯಮಿಗಳು ತೊಂದರೆ ಅನುಭವಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkx3c0s76rwtxk9n5tm57079,imgname-1-1773724369703.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಮಾ.17): &lt;/strong&gt;ಇಸ್ರೇಲ್&zwnj;-ಇರಾನ್ ಯುದ್ಧ, ಗಣಿ ಜಿಲ್ಲೆಯ ಜೀನ್ಸ್ ಉದ್ಯಮದ ಮೇಲೂ ದುಷ್ಪರಿಣಾಮ ಬೀರಿದೆ.&lt;/p&gt;&lt;p&gt;ಭಾರತದ ದಕ್ಷಿಣ ರಾಜ್ಯಗಳು, ವಿದೇಶಕ್ಕೆ ರಫ್ತಾಗುತ್ತಿದ್ದ ಇಲ್ಲಿನ ಜೀನ್ಸ್&zwnj; ಉಡುಪುಗಳಿಗೆ ಬೇಡಿಕೆ ಕುಸಿದಿದ್ದು, ಜೀನ್ಸ್&zwnj; ಉದ್ಯಮ ಆಶ್ರಯಿಸಿದವರು ತೊಳಲಾಟ ಎದುರಿಸುತ್ತಿದ್ದಾರೆ. ದುಬೈ, ಸಿಂಗಾಪುರ ಸೇರಿದಂತೆ 12 ದೇಶಗಳಿಗೆ ಬಳ್ಳಾರಿ ಜೀನ್ಸ್ ರಫ್ತಾಗುತ್ತಿತ್ತು. ತ್ರಿರಾಷ್ಟ್ರಗಳ ನಡುವಿನ ಯುದ್ಧದುನ್ಮಾದ ಜೀನ್ಸ್&zwnj; ಉಡುಪುಗಳ ಬೇಡಿಕೆಯನ್ನು ಭಾಗಶಃ ಕುಸಿಯುವಂತೆ ಮಾಡಿದೆ. ಯುದ್ಧ ಕಾರಣಕ್ಕೆ ನೆರೆಯ ರಾಷ್ಟ್ರಗಳ ಜೊತೆ ವ್ಯಾಪಾರ ವಹಿವಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಜೀನ್ಸ್ ಉಡುಪುಗಳ ರಫ್ತಿಗೆ ಸಮಸ್ಯೆ ಎದುರಾಗಿದೆ.&lt;/p&gt;&lt;h2&gt;ಕಚ್ಚಾ ಪದಾರ್ಥವೂ ಸಿಗುತ್ತಿಲ್ಲ:&lt;/h2&gt;&lt;p&gt;ಏತನ್ಮಧ್ಯೆ, ಬಳ್ಳಾರಿ ಜೀನ್ಸ್ ಉತ್ಪನ್ನಗಳಿಗೆ ಬಳಕೆಯಾಗುತ್ತಿದ್ದ ಕಚ್ಚಾ ಪದಾರ್ಥವಾದ ಹೈಡ್ರೋಜನ್ ಪೆರಾಕ್ಸೈಡ್, ಸೋಡಿಯಂ ಹೈಪೋಕ್ಲೋರೈಟ್, ಪೊಟ್ಯಾಸಿಯಂ ಪರ್ಮಾಂಗನೇಟ್ ಮತ್ತಿತರ ಕೆಮಿಕಲ್ಸ್ ಆಮದು ಸಂಪೂರ್ಣ ಬಂದ್ ಆಗಿದೆ. ಜೀನ್ಸ್&zwnj; ಉಡುಪುಗಳಿಗೆ ಬಣ್ಣ ಲೇಪಿಸಲು ಈ ಕೆಮಿಕಲ್ಸ್&zwnj;ಗಳನ್ನು ಬಳಕೆ ಮಾಡಲಾಗುತ್ತದೆ.&lt;/p&gt;&lt;p&gt;ಯುಗಾದಿ ಹಾಗೂ ರಂಜಾನ್ ಹಬ್ಬಗಳ ವೇಳೆ ಹೆಚ್ಚಿನ ಪ್ರಮಾಣದ ಜೀನ್ಸ್ ಉಡುಪುಗಳನ್ನು ರಫ್ತು ಮಾಡುತ್ತಿದ್ದ ಇಲ್ಲಿನ ಜೀನ್ಸ್ ಉದ್ಯಮಿಗಳು ಈ ಬಾರಿ ಕೆಲಸವಿಲ್ಲದೆ ಕುಳಿತಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/israel-iran-war-hits-ballari-jeans-industry-exports-halted-raw-material-shortage-rav/articleshow-3pph7sz"/>
        </item>
        <item>
            <title><![CDATA[ಲೋಕಾಯುಕ್ತ ಬಲೆಗೆ ಬಿತ್ತು ಮೀನುಗಾರಿಕೆ ಇಲಾಖೆಯ ದೊಡ್ಡ ತಿಮಿಂಗಲ; ಉಪ ನಿರ್ದೇಶಕ ಶಿವಣ್ಣನ ಮನೇಲಿ ಕೋಟಿ, ಕೋಟಿ ಆಸ್ತಿ!]]></title>
            <link>https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28</link>
            <guid isPermaLink="true">https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28</guid>
            <pubDate>Tue, 07 Apr 2026 20:38:02 +0530</pubDate>
            <description><![CDATA[&lt;p&gt;ಬಳ್ಳಾರಿಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿದ್ದು, ಬೇನಾಮಿ ಆಸ್ತಿಗಳ ಬಗ್ಗೆಯೂ ತನಿಖೆ ಮುಂದುವರೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knm7pew50f96bmgvwvzc6sam,imgname-ballari-shivanna-lokayukta-trap-1775574399874.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.07): ಭ್ರ&lt;/strong&gt;ಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಗಣಿ ನಾಡು ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ನಸುಕಿನ ಜಾವವೇ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಆಸ್ತಿ ವಿವರಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಯೊಬ್ಬರು ತನ್ನ ಅವಧಿಯಲ್ಲಿ ಎಷ್ಟು ಪ್ರಮಾಣದ ಆಸ್ತಿ ಮಾಡಿದ್ದಾರೆ ಎಂಬುದು ಈಗ ಬಯಲಾಗಿದೆ.&lt;/p&gt;&lt;h3&gt;&lt;strong&gt;ಆಸ್ತಿಯ ವಿವರಗಳು:&lt;/strong&gt;&lt;/h3&gt;&lt;p&gt;ಲೋಕಾಯುಕ್ತ ದಾಳಿಯ ವೇಳೆ ಪತ್ತೆಯಾದ ಆಸ್ತಿಗಳ ಪಟ್ಟಿ ಬೆಟ್ಟದಷ್ಟಿದೆ. ಬಳ್ಳಾರಿ ನಗರವೊಂದರಲ್ಲೇ ಶಿವಣ್ಣ ಅವರು ಬರೋಬ್ಬರಿ 14 ಸೈಟುಗಳನ್ನು ಹೊಂದಿದ್ದಾರೆ. ಇದಲ್ಲದೆ ಬಳ್ಳಾರಿ ನಗರದ ವಿವಿಧ ಬಡಾವಣೆಗಳಲ್ಲಿ 3 ಐಷಾರಾಮಿ ಮನೆಗಳು ಪತ್ತೆಯಾಗಿವೆ. ಇನ್ನು ಕೃಷಿ ಭೂಮಿಯ ವಿಷಯಕ್ಕೆ ಬಂದರೆ, ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಒಟ್ಟು 44 ಎಕರೆ ಜಮೀನು ಇರುವುದು ದಾಖಲೆಗಳಿಂದ ದೃಢಪಟ್ಟಿದೆ.&lt;/p&gt;&lt;h2&gt;&lt;strong&gt;ಚಿನ್ನ, ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್:&lt;/strong&gt;&lt;/h2&gt;&lt;p&gt;ಮನೆಯಲ್ಲಿ ನಡೆಸಿದ ಶೋಧದ ವೇಳೆ 600 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಮನೆಯಲ್ಲೇ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದು, ಒಟ್ಟು 8.5 ಲಕ್ಷ ರೂಪಾಯಿ ನಗದನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಇದರ ಜೊತೆಗೆ, ಶಿವಣ್ಣ ಅವರ ಬ್ಯಾಂಕ್ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.&lt;/p&gt;&lt;h3&gt;&lt;strong&gt;ಬೇನಾಮಿ ಆಸ್ತಿಯ ಶಂಕೆ:&lt;/strong&gt;&lt;/h3&gt;&lt;p&gt;ಕೇವಲ ಇಷ್ಟೇ ಅಲ್ಲದೆ, ಶಿವಣ್ಣ ಅವರು ತಮ್ಮ ಕುಟುಂಬಸ್ಥರು ಹಾಗೂ ಇತರರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಗಳನ್ನು ಮಾಡಿರುವ ಬಲವಾದ ಶಂಕೆ ವ್ಯಕ್ತವಾಗಿದೆ. ಕಚೇರಿ ಕೆಲಸದಲ್ಲಿ ಭ್ರಷ್ಟಾಚಾರ ನಡೆಸಿ, ಅಕ್ರಮ ಮಾರ್ಗದ ಮೂಲಕ ಈ ಹಣ ಸಂಪಾದನೆ ಮಾಡಿರಬಹುದು ಎಂಬ ನಿಟ್ಟಿನಲ್ಲಿ ತನಿಖೆ ತೀವ್ರಗೊಂಡಿದೆ. ಮನೆಯಲ್ಲಿ ಸಿಕ್ಕಿರುವ ಹಲವು ಪ್ರಮುಖ ದಾಖಲೆಗಳು ಮತ್ತು ಡೈರಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ತಲಾಶ್ ಮುಂದುವರಿಕೆ:&lt;/strong&gt;&lt;/h3&gt;&lt;p&gt;ಬಳ್ಳಾರಿಯ ಲೋಕಾಯುಕ್ತ ಅಧಿಕಾರಿಗಳ ತಂಡವು ಇನ್ನೂ ಶೋಧ ಕಾರ್ಯವನ್ನು ಮುಂದುವರೆಸಿದೆ. ಶಿವಣ್ಣ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳ ಮೇಲೂ ನಿಗಾ ಇಡಲಾಗಿದ್ದು, ದಾಖಲೆಗಳ ಪರಿಶೀಲನೆಯ ನಂತರ ಆಸ್ತಿಯ ಒಟ್ಟು ಮೌಲ್ಯ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸರ್ಕಾರಿ ಅಧಿಕಾರಿಯೊಬ್ಬರು ಅಕ್ರಮವಾಗಿ ಇಷ್ಟೊಂದು ಆಸ್ತಿ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.&lt;/p&gt;&lt;p&gt;ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಮೇಲೆ 10 ಕ್ಕೂ ಹೆಚ್ಚು ದೂರುಗಳು ಲೊಕಾಯುಕ್ತರಿಗೆ ಸಲ್ಲಿಕೆಯಾಗಿದ್ದವು. ಭಷ್ಟಚಾರ ಹಾಗೂ ಅಕ್ರಮ ಆದಾಯದ ದೂರುಗಳು ಸಲ್ಲಿಕೆ ಪ್ರಕರಣಗಳು ಇವಾಇದ್ದವು. ಕಳೆದ ಹತ್ತು ವರ್ಷದಿಂದ ಶಿವಣ್ಣ ಎಲ್ಲಿಯೂ ವರ್ಗಾವಣೆ ಆಗದೇ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ತನ್ನ ಪ್ರಭಾವವನ್ನು ಬಳಸಿಕೊಂಡು ಎಲ್ಲಿಗೂ ವರ್ಗಾವಣೆ ಆಗದಂತೆ ನೋಡಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.&lt;/p&gt;]]></content:encoded>
            <category>ballari</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/ballari-lokayukta-raid-fisheries-deputy-director-shivanna-assets-found-sat/articleshow-55vgd28"/>
        </item>
        <item>
            <title><![CDATA[ಬಳ್ಳಾರಿ: ಏರುತ್ತಿರುವ ಬಿಸಿಲ ತಾಪದ ನಡುವೆ: ರಸ್ತೆ ಅಗಲೀಕರಣಕ್ಕಾಗಿ 30ಕ್ಕೂ ಹೆಚ್ಚು ಮರಗಳಿಗೆ ಕೊಡಲಿ ಏಟು]]></title>
            <link>https://kannada.asianetnews.com/state/bellary-amid-rising-heat-over-30-trees-cutoff-for-road-widening/articleshow-5egx6lv</link>
            <guid isPermaLink="true">https://kannada.asianetnews.com/state/bellary-amid-rising-heat-over-30-trees-cutoff-for-road-widening/articleshow-5egx6lv</guid>
            <pubDate>Fri, 24 Apr 2026 13:05:03 +0530</pubDate>
            <description><![CDATA[&lt;p&gt;ಬಿಸಿಲ ನಾಡು ಬಳ್ಳಾರಿಯಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಗುತ್ತಿಗೆದಾರನೊಬ್ಬ 234 ಮರಗಳನ್ನು ಕಡಿಯಲು ಮುಂದಾಗಿದ್ದಾನೆ. ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದರೂ ಮರಗಳ ಕಡಿದಿದ್ದು ತಡೆಯಲು ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpz5pb7v99zz0bknm39ge0yy,imgname-tree-cutting-in-ballary-1777015139579.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ರಸ್ತೆ ಅಗಲೀಕರಣಕ್ಕಾಗಿ ಮರಗಳ ಮಾರಣಹೋಮ&lt;/strong&gt;&lt;/h2&gt;&lt;p&gt;ಬಳ್ಳಾರಿ: ಬೇಸಿಗೆಯ ಬಿಸಿಲಿನ ದಾಹ ದಿನೇ ದಿನೇ ಹೆಚ್ಚಾಗುತ್ತಿದೆ. ಬಿಸಿಲ ನಾಡು ಬಳ್ಳಾರಿಯಲ್ಲಿ ಬಿರು ಬೇಸಿಗೆಯ ಬಿಸಿಲ ತಾಪದಿಂದ ಮನೆಯೊಳಗೂ ಕೂರಲಾರದಂತಹ ಸ್ಥಿತಿ ಇದೆ. ಹೀಗಿರುವಾಗ ರಸ್ತೆ ಅಗಲೀಕರಣದ ನೆಪದಲ್ಲಿ ರಸ್ತೆ ಬದಿ ಇದ್ದ 30ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ರಸ್ತೆ ಅಗಲೀಕರಣಕ್ಕೆ ಅಡ್ಡವಾಗಿದೆ ಎಂದು 234 ಮರಗಳನ್ನು ಗುತ್ತಿಗೆದಾರ ಕಡಿಯಲು ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ರಸ್ತೆ ಬದಿ ಇದ್ದ ಈ ಸಾಲು ಮರಗಳನ್ನು ಕಡಿಯುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;p&gt;&lt;strong&gt;30ಕ್ಕೂ ಹೆಚ್ಚು ಮರಗಳಿಗೆ ಕತ್ತರಿ&lt;/strong&gt;&lt;/p&gt;&lt;p&gt;ಬಿಸಿಲ ದಾಹದಿಂದ ತತ್ತರಿಸಿರುವ ಗಣಿನಾಡು ಬಳ್ಳಾರಿಯಲ್ಲಿ ಮರಗಳನ್ನು ನಡಬೇಕು ಎಂದು ಜಾಗೃತಿ ಮೂಡಿಸಬೇಕಾದ ಸಮಯದಲ್ಲಿ ಮರಗಳನ್ನು ಕಡಿದು ಹಾಕಲಾಗುತ್ತಿದೆ.&lt;/p&gt;&lt;p&gt;ರಸ್ತೆ ಅಗಲೀಕರಣದ ನೆಪದಲ್ಲಿ ಗುತ್ತಿಗೆದಾರನೊಬ್ಬ ನೂರಾರು ಮರಗಳಿಗೆ ಕೊಡಲಿ ಪೆಟ್ಟು ಹಾಕಿದ್ದಾನೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಿಂದ ಕೊಳಗಲ್ ಗ್ರಾಮದ ರಸ್ತೆಯವರೆಗೆ ರಸ್ತೆ ಅಗಲೀಕರಣ ಮಾಡಲಾಗ್ತಿದೆ. ಇದಕ್ಕೆ ಅಡ್ಡವಾಗಿದೆ ಎಂದು 234 ಮರಗಳನ್ನು ಕಡಿಯಲು ಗುತ್ತಿಗೆದಾರ ಮುಂದಾಗಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸ್ನೇಹಿತರ ಜೊತೆ ಪ್ರವಾಸ ಹೋಗಿ ಬರುವ ವೇಳೆ ಯುವಕ ರೈಲಿನಿಂದ ಬಿದ್ದು ಯುವಕ ನಿಗೂಢ ಸಾವು&lt;/strong&gt;&lt;/p&gt;&lt;p&gt;&lt;strong&gt;ಅರಣ್ಯ ಇಲಾಖೆ ವಿರೋಧದ ನಡುವೆಯೂ ಮರಗಳಿಗೆ ಕತ್ತರಿ:&lt;/strong&gt;&lt;/p&gt;&lt;p&gt;ಇದರ ಭಾಗವಾಗಿ ನಿನ್ನೆ ತಡರಾತ್ರಿ ನಾಲ್ಕಾರು ಮರಗಳನ್ನು ಕಡಿದಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಅಡ್ಡಿಪಡಿಸಿದಾಗ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮರಗಳ ಕಡಿಯುತ್ತಿರೋ ವಿಡಿಯೋ ಮಾಡಿದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯ ಮೊಬೈಲ್ ಫೋನ್ ಒಡೆದು ಹಾಕಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿ ಮರ ಕಡಿಯಲು ಮುಂದಾಗಿರೋದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇತ್ತ ಅರಣ್ಯ ಇಲಾಖೆ ಮರ ಕಡಿಯುವುದಕ್ಕೆ ಅನುಮತಿ ನಿರಾಕರಿಸಿದೆ. ಆದ್ರೂ ರಸ್ತೆ ಅಗಲೀಕರಣ ನೆಪದಲ್ಲಿ ಮರಗಳನ್ನು ಕಡಿಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗ್ತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಶಿವಮೊಗ್ಗ: ವೃದ್ಧೆಯ ಮನೆ ದರೋಡೆ, ಕೈ ಕಟ್ಟಿ ಬಾಯಿಗೆ ಬಟ್ಟೆ ತುರುಕಿ 18 ಲಕ್ಷದ ಚಿನ್ನಾಭರಣದೊಂದಿಗೆ ಪರಾರಿ&lt;/strong&gt;&lt;/p&gt;]]></content:encoded>
            <category>ballari</category>
            <dc:creator>Anusha Kb</dc:creator>
            <atom:link href="https://kannada.asianetnews.com/state/bellary-amid-rising-heat-over-30-trees-cutoff-for-road-widening/articleshow-5egx6lv"/>
        </item>
        <item>
            <title><![CDATA[ಬಳ್ಳಾರಿ: ಮೇಲಾಧಿಕಾರಿ ವಿರುದ್ಧ ಸೇಡು ತೀರಿಸಿಕೊಳ್ಳಲು ಕೀಳು ಮಟ್ಟದ ಕೆಲಸಕ್ಕಿಳಿದು ಲಾಕ್ ಆದ SDC!]]></title>
            <link>https://kannada.asianetnews.com/karnataka-districts/ballari-sdc-booked-for-fake-complaint-plot-against-adc-over-suspension-gdp/articleshow-5l2f4lq</link>
            <guid isPermaLink="true">https://kannada.asianetnews.com/karnataka-districts/ballari-sdc-booked-for-fake-complaint-plot-against-adc-over-suspension-gdp/articleshow-5l2f4lq</guid>
            <pubDate>Fri, 03 Apr 2026 10:29:36 +0530</pubDate>
            <description><![CDATA[ಅಮಾನತುಗೊಂಡಿದ್ದಕ್ಕೆ ಮೇಲಾಧಿಕಾರಿ ಮೇಲೆ ಸೇಡು ತೀರಿಸಿಕೊಳ್ಳಲು, ದ್ವಿತೀಯ ದರ್ಜೆ ಸಹಾಯಕನೊಬ್ಬ ಮಹಿಳಾ ತಹಶೀಲ್ದಾರ್ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ್ದಾನೆ. ಅಪರ ಜಿಲ್ಲಾಧಿಕಾರಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಬರೆದ ಪತ್ರದ ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn8t7wfvr3qjj95ny15te06s,imgname-ballari-sdc-case-1775191192059.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ :&lt;/strong&gt; ಮೇಲಾಧಿಕಾರಿ ಅಮಾನತು ಮಾಡಿದರು ಎನ್ನುವ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಹೋಗಿ ದ್ವಿತಿಯ ದರ್ಜೆ ಸಹಾಯಕ ಎಡವಟ್ಟು ಮಾಡಿಕೊಂಡು ಪೊಲೀಸ್ ತನಿಖೆಗೆ ಒಳಗಾದ ಘಟನೆ ನಡೆದಿದೆ. ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝಬೇರ್ ವಿರುದ್ದ ಸೇಡು ತೀರಿಸಿ ಕೊಳ್ಳಲು ಹೋಗಿ ಎಸ್ ಡಿ ಸಿ ಗಂಗಾಧರ್ ಲಾಕ್ ಆಗಿದ್ದಾನೆ. ಈ ಬಗ್ಗೆ ಸಂಪೂರ್ಣ ಘಟನೆ ಇಲ್ಲಿದೆ.&lt;/p&gt;&lt;p&gt;ಮೇಲಾಧಿಕಾರಿ ಅಮಾನತು ಮಾಡಿದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ಯತ್ನಿಸಿದ ದ್ವಿತೀಯ ದರ್ಜೆ ಸಹಾಯಕ (SDC)ನ ಕೃತ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಅಪರ ಜಿಲ್ಲಾಧಿಕಾರಿ (ADC) ಮೊಹಮ್ಮದ್ ಝುಬೇರ್ ನೀಡಿದ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳು ದ್ವಿತೀಯ ದರ್ಜೆ ಸಹಾಯಕ ಗಂಗಾಧರ್&zwnj;ರನ್ನು ಅಮಾನತು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಝುಬೇರ್&zwnj; ವಿರುದ್ಧ ವೈಯಕ್ತಿಕ ದ್ವೇಷ ಬೆಳೆಸಿಕೊಂಡಿದ್ದ ಗಂಗಾಧರ್, ಕೀಳುಮಟ್ಟದ ಕ್ರಮಕ್ಕೆ ಮುಂದಾಗಿದ್ದ.&lt;/p&gt;&lt;h2&gt;ಸೇಡು ತೀರಿಸಲು ಹೋಗಿ ಲಾಕ್&lt;/h2&gt;&lt;p&gt;ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಗಂಗಾಧರ್, ಬಳ್ಳಾರಿಯ ಮಹಿಳಾ ತಹಶೀಲ್ದಾರ್ ಒಬ್ಬರ ಹೆಸರಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಿಗೆ ನಕಲಿ ಪತ್ರಗಳನ್ನು ಕಳುಹಿಸಿದ್ದಾನೆ. ಆ ಪತ್ರದಲ್ಲಿ ಮಹಿಳಾ ತಹಶೀಲ್ದಾರ್ ಅವರ ನಕಲಿ ಸಹಿ ಹಾಕಿ, ಎಡಿಸಿ ಮೊಹಮ್ಮದ್ ಝುಬೇರ್ ತಮ್ಮ ಮೇಲೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಸುಳ್ಳು ಆರೋಪಗಳನ್ನು ಮಾಡಿದ್ದಾನೆ.&lt;/p&gt;&lt;p&gt;ಈ ಪತ್ರಗಳನ್ನು ವಿವಿಧ ಕಡೆಗಳಿಗೆ ಕಳುಹಿಸಲಾಗಿದ್ದು, ಬಳಿಕ ಅವು ಜಿಲ್ಲಾಧಿಕಾರಿ ಕಚೇರಿಗೂ ತಲುಪಿವೆ. ಪತ್ರವನ್ನು ನೋಡಿದ ಮಹಿಳಾ ತಹಶೀಲ್ದಾರ್ ತೀವ್ರ ಆಘಾತಕ್ಕೊಳಗಾಗಿ, ಇದು ಸಂಪೂರ್ಣ ನಕಲಿ ಹಾಗೂ ತಮ್ಮ ಹೆಸರನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಗಂಗಾಧರ್&zwnj;ನ ಕುತಂತ್ರವನ್ನು ಬಹಿರಂಗಪಡಿಸಿದ್ದಾರೆ. ನಂತರ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.&lt;/p&gt;&lt;h2&gt;ಅಧಿಕಾರಿಯೊಬ್ಬರ ಸಹಕಾರದ ಅನುಮಾನ&lt;/h2&gt;&lt;p&gt;ಪ್ರಾಥಮಿಕ ಮಾಹಿತಿಯ ಪ್ರಕಾರ, ಗಂಗಾಧರ್&zwnj;ಗೆ ಹಿಂದೆ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ (AC) ಕೆಲಸ ಮಾಡಿದ್ದ ಅಧಿಕಾರಿಯೊಬ್ಬರ ಸಹಕಾರವೂ ಇದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆ ಆ ಅಧಿಕಾರಿಯ ಪಾತ್ರದ ಕುರಿತು ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೈಯಕ್ತಿಕ ಸೇಡಿಗಾಗಿ ಸರ್ಕಾರಿ ಅಧಿಕಾರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿದ ಈ ಪ್ರಕರಣ ಆಡಳಿತ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಗತಿಗಳು ಬಹಿರಂಗವಾಗುವ ಸಾಧ್ಯತೆಯಿದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/ballari-sdc-booked-for-fake-complaint-plot-against-adc-over-suspension-gdp/articleshow-5l2f4lq"/>
        </item>
        <item>
            <title><![CDATA[ಫುಡ್  ಜೊತೆಗೆ ಡ್ರಗ್ಸ್ ಸಪ್ಲೈ: ಡೆಲಿವರಿ ಬಾಯ್ಸ್‌ ಮೇಲೆ ಹದ್ದಿನ ಕಣ್ಣಿಟ್ಟ ಬಳ್ಳಾರಿ ಪೊಲೀಸ್, ಸ್ವಿಗ್ಗಿ, ಝೋಮ್ಯಾಟೊಗೆ ಖಡಕ್ ಸೂಚನೆ]]></title>
            <link>https://kannada.asianetnews.com/state/ballari-police-mandates-verification-delivery-staff-details-of-swiggy-zomato-must-be-submitted-to-stations-rav/articleshow-cyg45fg</link>
            <guid isPermaLink="true">https://kannada.asianetnews.com/state/ballari-police-mandates-verification-delivery-staff-details-of-swiggy-zomato-must-be-submitted-to-stations-rav/articleshow-cyg45fg</guid>
            <pubDate>Wed, 22 Apr 2026 10:49:02 +0530</pubDate>
            <description><![CDATA[&lt;p&gt;ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಿಗ್ಗಿ, ಝೋಮ್ಯಾಟೊ ಸೇರಿದಂತೆ ವಿವಿಧ ಇ-ಸೇವಾ ಸಂಸ್ಥೆಗಳು ತಮ್ಮ ಸಿಬ್ಬಂದಿಯ ಸಂಪೂರ್ಣ ವಿವರಗಳನ್ನು ಪೊಲೀಸ್ ಠಾಣೆಗೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾದಕ ವಸ್ತುಗಳ ಸಾಗಾಟ ತಡೆಗಟ್ಟುವಿಕೆ ಮತ್ತು ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpssj2mc6ypjxksqdbym2yej,imgname-----------------------2026-04-22t104021.318-1776834644620.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.22):&lt;/strong&gt; ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಿಗ್ಗಿ, ಝೋಮ್ಯಾಟೊ, ಅಮೆಜಾನ್, ಬ್ಲಿಂಕಿಟ್ ಸೇರಿದಂತೆ ವಿವಿಧ ಸಂಸ್ಥೆಗಳು ಮತ್ತು ಖಾಸಗಿ ಸಾರಿಗೆ ಸಂಸ್ಥೆಗಳು ತಮ್ಮಲ್ಲಿ ಕೆಲಸ ಮಾಡುವ ಪ್ರತಿ ಸಿಬ್ಬಂದಿಯ ಪೂರ್ಣ ವಿವರಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ಸಲ್ಲಿಸುವುದು ಕಡ್ಡಾಯ ಎಂದು ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಹೇಳಿದರು.&lt;/p&gt;&lt;p&gt;ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಲಿವರಿ ಸಮಯದಲ್ಲಿ ಮಾದಕ ವಸ್ತು ಸೇರಿದಂತೆ ಇನ್ನಿತರ ನಿಷೇಧಿತ ವಸ್ತುಗಳನ್ನು ಸಾಗಟ ಮಾಡುವುದನ್ನು ತಡೆಯಲು ಹಾಗೂ ಪ್ರತಿನಿತ್ಯದ ಚಟವಟಿಕೆಗಳ ಮೇಲೆ ನಿಗಾವಣೆ ಇಡಲು, ಗ್ರಾಹಕರ ಹಿತದೃಷ್ಟಿಯಿಂದ ವಿವಿಧ ಇ-ಸೇವಾ ವಲಯಗಳ ಮುಖ್ಯಸ್ಥರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.&lt;/p&gt;&lt;p&gt;ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಚೆ ಇಲಾಖೆ, ರೈಲ್ವೆ ಪೊಲೀಸ್, ಇ-ಕಾಮರ್ಸ್ ಸಂಸ್ಥೆಗಳು, ಆಹಾರ ವಿತರಣಾ ಸಂಸ್ಥೆಗಳು ಮತ್ತು ಖಾಸಗಿ ಟ್ರಾವೆಲ್ಸ್ ಏಜೆನ್ಸಿಗಳು ತಮ್ಮ ಸಿಬ್ಬಂದಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ತಮ್ಮ ಪ್ರತಿ ಸಿಬ್ಬಂದಿ ತಮ್ಮ ಆಧಾರ್ ಕಾರ್ಡ್ ಅಥವಾ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರಬೇಕು. ಹೊಸದಾಗಿ ಕೆಲಸಕ್ಕೆ ಸೇರುವ ಮತ್ತು ಈಗಾಗಲೇ ಕೆಲಸದಲ್ಲಿರುವ ಸಿಬ್ಬಂದಿ ಕಡ್ಡಾಯವಾಗಿ ಪೊಲೀಸ್ ಪರಿಶೀಲನಾ ಪ್ರಮಾಣಪತ್ರ ಹೊಂದಿರಬೇಕು. ಕಂಪನಿಗಳು ತಮ್ಮಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಿಟ್ಟು ಹೋದರೆ ಅಥವಾ ಹೊಸದಾಗಿ ಸೇರಿದ ಸಿಬ್ಬಂದಿಯ ಮಾಹಿತಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.&lt;/p&gt;&lt;p&gt;ಮುಖ್ಯವಾಗಿ ಡೆಲಿವರಿ ಬಾಯ್ಸ್ ಮತ್ತು ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸದಂತೆ ಸಂಸ್ಥೆಗಳು ಎಚ್ಚರಿಕೆ ವಹಿಸಬೇಕು. ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.&lt;/p&gt;&lt;p&gt;ವಸ್ತುಗಳ ದಾಸ್ತಾನು ಹಾಗೂ ಪ್ಯಾಕಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಬುಕ್ಕಿಂಗ್ ರಿಜಿಸ್ಟರ್ ನಿರ್ವಹಣೆ, ಸಂಸ್ಥೆಗಳು ಕಡ್ಡಾಯವಾಗಿ ಲೈಸೆನ್ಸ್ ಹೊಂದಿರಬೇಕು, ಡೆಲಿವರಿ ಬಾಯ್ಸ್ ಗಳ ನೊಂದಣಿ ಕಡ್ಡಾಯ, ವಾಹನ ಚಾಲನಾ ಲೈಸನ್ಸ್ ಹೊಂದಿದ ಡೆಲಿವರಿ ಬಾಯ್ಸ್ ಗಳನ್ನು ಮಾತ್ರ ನೇಮಕ ಮಾಡಿಕೊಳ್ಳಲು, ಡೆಲಿವರಿ ಬಾಯ್ಸ್ ಗಳ ಆಧಾರ್ ಕಾರ್ಡ, ಪಾನ್ ಕಾರ್ಡಗಳನ್ನು ಸಂಸ್ಥೆಗಳ ಆಡಳಿತ ಮಂಡಳಿಯವರು ನೇಮಕಾತಿ ಪೂರ್ವದಲ್ಲಿ ಕಡ್ಡಾಯವಾಗಿ ಪಡೆಯಬೇಕು. ಡೆಲಿವರಿ ಬಾಯ್ಸ್ ಹಾಗೂ ಕಚೇರಿ ಸಿಬ್ಬಂದಿಯವರ ಸಮಗ್ರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಸಲ್ಲಿಸಬೇಕು.&lt;/p&gt;&lt;p&gt;ಕೆಲವು ಡೆಲಿವರಿ ಸಂದರ್ಭದಲ್ಲಿ ಗ್ರಾಹಕರಿಗೆ ಆರ್ಡರ್ ಮಾಡಿದ ವಸ್ತುಗಳ ತಲುಪಿಸುವ ಜೊತೆಯಲ್ಲಿಯೇ ಇನ್ನಿತರ ವಸ್ತುಗಳನ್ನು (ಮಾದಕ) ತಲುಪಿಸುತ್ತಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ವಿಳಂಬವಾಗಿ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವ ಡೆಲಿವರಿ ಬಾಯ್ಸ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಸಲ್ಲಿಸಬೇಕು. ಡೆಲಿವರಿ ಪಾರ್ಸಲ್ ಗಳನ್ನು ಗ್ರಾಹಕರಿಗೆ ತಲುಪಿಸುವ ಸಮಯದಲ್ಲಿ, ವಸ್ತುಗಳ ಬಗ್ಗೆ ಅನುಮಾನ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಪೋಸ್ಟಲ್ ಇಲಾಖೆ, ಡೊಮಿನೋಸ್, ಕೆಎಫ್&zwnj;ಸಿ, ಡಿಟಿಡಿಸಿ ಕೊರಿಯರ್, ಟ್ರಾವೆಲ್ಸ್ ಏಜೆನ್ಸಿಗಳು ಸೇರಿದಂತೆ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಸೇವಾ ಸಂಸ್ಥೆಗಳು ಈ ಸುರಕ್ಷತಾ ಕ್ರಮಗಳಿಗೆ ಸಹಕರಿಸಬೇಕು ಎಂದು ಎಸ್ಪಿ ಪನ್ನೇಕರ್ ತಿಳಿಸಿದರು.&lt;/p&gt;&lt;p&gt;ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್.ಎಸ್, ಬಳ್ಳಾರಿ ನಗರ ಉಪವಿಭಾಗದ ಡಿಎಸ್&zwnj;ಪಿ ಎಂ.ಗೋವಿಂದ್ ರಾಜ್ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಇದ್ದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/ballari-police-mandates-verification-delivery-staff-details-of-swiggy-zomato-must-be-submitted-to-stations-rav/articleshow-cyg45fg"/>
        </item>
        <item>
            <title><![CDATA[ಕಂಪ್ಲಿಯಲ್ಲಿ ಮೌಲಾನಾ ಆಜಾದ್ ಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ: ಶಾಸಕ ಗಣೇಶ್ ವಿರುದ್ಧವೇ ಪ್ರತಿಭಟನೆ!]]></title>
            <link>https://kannada.asianetnews.com/karnataka-districts/ballari-kampli-maulana-azad-school-construction-opposition-mla-jn-ganesh-sat/articleshow-gp2o522</link>
            <guid isPermaLink="true">https://kannada.asianetnews.com/karnataka-districts/ballari-kampli-maulana-azad-school-construction-opposition-mla-jn-ganesh-sat/articleshow-gp2o522</guid>
            <pubDate>Sun, 29 Mar 2026 19:51:54 +0530</pubDate>
            <description><![CDATA[&lt;p&gt;ಬಳ್ಳಾರಿಯ ಕಂಪ್ಲಿ ಪಟ್ಟಣದಲ್ಲಿ ಮೌಲಾನಾ ಆಜಾದ್ ಶಾಲಾ ಕಟ್ಟಡ ನಿರ್ಮಾಣವು ತೀವ್ರ ವಿವಾದಕ್ಕೆ ಕಾರಣವಾಗಿದೆ. ಶಾಲಾ ನಿರ್ಮಾಣದಿಂದ ತಮ್ಮ ಮನೆಗಳನ್ನು ತೆರವುಗೊಳಿಸಲಾಗುತ್ತದೆ, ಮಕ್ಕಳ ಆಟದ ಮೈದಾನ ಇಲ್ಲವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು, ಶಾಸಕ ಜೆ.ಎನ್ ಗಣೇಶ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmwzehnq40hq3ab685qgs0eg,imgname-kampli-moulana-azad-school-1774794000055.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಮಾ.29): ಜಿ&lt;/strong&gt;ಲ್ಲೆಯ ಕಂಪ್ಲಿ ಪಟ್ಟಣದಲ್ಲಿ ಮೌಲಾನಾ ಆಜಾದ್ ಶಾಲೆ ನಿರ್ಮಾಣದ ವಿಚಾರ ಈಗ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಜಾಗದ ವಿಚಾರವಾಗಿ ಸ್ಥಳೀಯರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಯೋಜನೆಯಿಂದಾಗಿ ತಮ್ಮ ಮನೆಗಳಿಗೆ ತೊಂದರೆಯಾಗಲಿದೆ ಎಂದು ಆರೋಪಿಸಿರುವ ಸ್ಥಳೀಯರು ಶಾಸಕ ಜೆ.ಎನ್ ಗಣೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h2&gt;&lt;p&gt;ಕಂಪ್ಲಿ ಪಟ್ಟಣದ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಮೌಲಾನಾ ಆಜಾದ್ ಶಾಲೆಯ ಹೊಸ ಕಟ್ಟಡವನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ತಂಡ ಸ್ಥಳ ಪರಿಶೀಲನೆಗಾಗಿ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಮಾಯಿಸಿದ ನೂರಾರು ಸ್ಥಳೀಯ ನಿವಾಸಿಗಳು, ಸ್ಥಳ ಪರಿಶೀಲನೆಗೆ ಅಡ್ಡಿಪಡಿಸಿದರು. ಅಧಿಕಾರಿಗಳ ಜೊತೆ ತೀವ್ರ ವಾಗ್ವಾದಕ್ಕಿಳಿದ ಜನರು, ಯಾವುದೇ ಕಾರಣಕ್ಕೂ ಇಲ್ಲಿ ಹೊಸ ಶಾಲೆ ನಿರ್ಮಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.&lt;/p&gt;&lt;h2&gt;&lt;strong&gt;ಸ್ಥಳೀಯರ ವಿರೋಧಕ್ಕೆ ಕಾರಣವೇನು?&lt;/strong&gt;&lt;/h2&gt;&lt;p&gt;ಸಕ್ಕರೆ ಕಾರ್ಖಾನೆ ಆವರಣದಲ್ಲಿ ಶಾಲೆ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಲು ಪ್ರಮುಖವಾಗಿ ಮೂರು ಕಾರಣಗಳಿವೆ:&lt;/p&gt;&lt;p&gt;&lt;strong&gt;ಜಾಗದ ಅಭಾವ: &lt;/strong&gt;ಮೌಲಾನಾ ಆಜಾದ್ ಶಾಲೆ ನಿರ್ಮಿಸಲು ಉದ್ದೇಶಿಸಿರುವ ಜಾಗದ ಪಕ್ಕದಲ್ಲೇ ಈಗಾಗಲೇ ಒಂದು ಸರ್ಕಾರಿ ಶಾಲೆ ಕಾರ್ಯನಿರ್ವಹಿಸುತ್ತಿದೆ. ಈಗ ಮತ್ತೊಂದು ಶಾಲಾ ಕಟ್ಟಡವನ್ನು ಅಲ್ಲಿಯೇ ನಿರ್ಮಿಸಿದರೆ ಇಡೀ ಜಾಗ ಕಿರಿದಾಗುತ್ತದೆ. ಇದರಿಂದಾಗಿ ಈಗಿರುವ ಶಾಲಾ ಮಕ್ಕಳ ಆಟದ ಮೈದಾನ ಮತ್ತು ಇತರ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂಬುದು ಸಾರ್ವಜನಿಕರ ವಾದ.&lt;/p&gt;&lt;p&gt;&lt;strong&gt;ಒಕ್ಕಲೆಬ್ಬಿಸುವ ಭೀತಿ: &lt;/strong&gt;ಜಾಗ ಕಿರಿದಾದಾಗ ಶಾಲಾ ಅವಶ್ಯಕತೆಗಳಿಗಾಗಿ ಪಕ್ಕದಲ್ಲೇ ಇರುವ ಮನೆಗಳನ್ನು ತೆರವುಗೊಳಿಸುವ ಸಾಧ್ಯತೆ ಇದೆ. ಮೊದಲಿನಿಂದಲೂ ಸಕ್ಕರೆ ಫ್ಯಾಕ್ಟರಿ ಬಳಿ ವಾಸಿಸುತ್ತಿರುವ ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.&lt;/p&gt;&lt;p&gt;&lt;strong&gt;ಮನೆಗಳ ರಕ್ಷಣೆ: &lt;/strong&gt;'ನಮ್ಮ ಮನೆಗಳನ್ನು ಕಿತ್ತುಹಾಕಿ ನಮಗೆ ತೊಂದರೆ ಕೊಡುತ್ತಾರೆ. ನಮಗೆ ಆಶ್ರಯ ನೀಡುವುದನ್ನು ಬಿಟ್ಟು, ಇರುವ ಸೂರನ್ನು ಕಸಿದುಕೊಳ್ಳಲು ಸಂಚು ನಡೆಯುತ್ತಿದೆ' ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಶಾಸಕ ಜೆ.ಎನ್ ಗಣೇಶ್ ವಿರುದ್ಧ ಆಕ್ರೋಶ:&lt;/strong&gt;&lt;/h3&gt;&lt;p&gt;ಈ ಇಡೀ ಬೆಳವಣಿಗೆಯ ಹಿಂದೆ ಸ್ಥಳೀಯ ಶಾಸಕ ಜೆ.ಎನ್ ಗಣೇಶ್ ಅವರ ಹಸ್ತಕ್ಷೇಪವಿದೆ ಎಂದು ಜನರು ದೂರಿದ್ದಾರೆ. ಸ್ಥಳೀಯರ ಸಮಸ್ಯೆಗಳನ್ನು ಆಲಿಸದೆ ಏಕಪಕ್ಷೀಯವಾಗಿ ಶಾಲೆ ನಿರ್ಮಾಣಕ್ಕೆ ಮುಂದಾಗಿರುವ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಜನವಸತಿ ಪ್ರದೇಶದಲ್ಲಿ ಇಂತಹ ಯೋಜನೆಗಳನ್ನು ತರುವ ಮುನ್ನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂಬುದು ಜನರ ಆಗ್ರಹವಾಗಿದೆ.&lt;/p&gt;&lt;p&gt;ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಸ್ಥಳೀಯರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ತಮ್ಮ ಬದುಕು ಮತ್ತು ಮನೆಗೆ ಕುತ್ತು ಬರುವ ಯಾವುದೇ ಯೋಜನೆಯನ್ನು ಒಪ್ಪುವುದಿಲ್ಲ ಎಂದು ಕಂಪ್ಲಿ ನಿವಾಸಿಗಳು ಪಟ್ಟು ಹಿಡಿದಿದ್ದಾರೆ. ಶಾಲಾ ನಿರ್ಮಾಣದಂತಹ ಅಭಿವೃದ್ಧಿ ಕೆಲಸಗಳಿಗೆ ನಮ್ಮ ವಿರೋಧವಿಲ್ಲ, ಆದರೆ ಅದು ಬಡವರ ಹೊಟ್ಟೆ ಹೊಡೆದು ಅಥವಾ ಮನೆಗಳನ್ನು ಕೆಡವಿ ಮಾಡಬಾರದು ಎಂಬುದು ಸ್ಥಳೀಯರ ಒಕ್ಕೊರಲ ಧ್ವನಿಯಾಗಿದೆ.&lt;/p&gt;]]></content:encoded>
            <category>ballari</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/ballari-kampli-maulana-azad-school-construction-opposition-mla-jn-ganesh-sat/articleshow-gp2o522"/>
        </item>
        <item>
            <title><![CDATA[ಬಳ್ಳಾರಿ: ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಸಾವಿಗೆ ಶರಣು]]></title>
            <link>https://kannada.asianetnews.com/state/ballari-agriculture-department-contract-employee-surrenders-to-death/articleshow-h18zs77</link>
            <guid isPermaLink="true">https://kannada.asianetnews.com/state/ballari-agriculture-department-contract-employee-surrenders-to-death/articleshow-h18zs77</guid>
            <pubDate>Mon, 16 Mar 2026 18:54:15 +0530</pubDate>
            <description><![CDATA[&lt;p&gt;&lt;strong&gt;Sandur contract employee death: &lt;/strong&gt;ಬಳ್ಳಾರಿಯ ಸಂಡೂರಿನಲ್ಲಿ ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಮೇಲಾಧಿಕಾರಿಯ ಮಾನಸಿಕ ಕಿರುಕುಳದಿಂದ ನೊಂದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದ ಡೆತ್&zwnj;ನೋಟ್&zwnj;ನಲ್ಲಿ ಅಧಿಕಾರಿ &amp;nbsp;ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkvcnygfacq6gw6h0dxaj9d0,imgname-ballari-death-1773667023375.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಸಾವಿಗೆ ಶರಣಾದ ಗುತ್ತಿಗೆ ನೌಕರ&lt;/strong&gt;&lt;/h2&gt;&lt;p&gt;ಬಳ್ಳಾರಿ : ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಸಾವಿಗೆ ಶರಣಾಗಿದ್ದಾರೆ. ಸಂಡೂರು ತಾಲೂಕಿನ ಗೌರಿಪುರದಲ್ಲಿ ಘಟನೆ ನಡೆದಿದೆ. ಜಿ.ಎನ್. ರಾಜು ನೇಣಿಗೆ ಶರಣಾದ ಗುತ್ತಿಗೆ ನೌಕರರಾಗಿದ್ದು, ಸಂಡೂರು ಕೃಷಿ ಇಲಾಖೆಯ ತಾಲೂಕು (AO) ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್&zwnj;ನೋಟ್&zwnj;ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.&lt;/p&gt;&lt;p&gt;ಅಧಿಕಾರಿ ರಾಘವೇಂದ್ರ ಅವರು ರಾಜು ಅವರಿಗೆ ಕೆಲಸಕ್ಕೆ ಸೇರಿದ ದಿನದಿಂದಲೇ ಮಾನಸಿಕ ಕಿರುಕುಳ ನೀಡುತ್ತಿದ್ರು. ಕಚೇರಿಯಲ್ಲಿನ ಕಿರುಕುಳದ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಅವರ ಮುಂದೆ ಹೇಳಿಕೊಂಡಿದ್ದರು, ದಿನ ನಿತ್ಯ ಕೆಲಸಕ್ಕೆ ಹೋದ್ರು ರಾಘವೇಂದ್ರ ಅವರು ತನ್ನನ್ನು ಮಾತನಾಡಿಸುತ್ತಿರಲಿಲ್ಲ. ಯಾವುದೇ ಕೆಲಸ ಮಾಡು ಅಂತ ಹೇಳುತ್ತಿರಲಿಲ್ಲ ಕಳೆದ ನಾಲ್ಕು ತಿಂಗಳುಗಳಿಂದ ಸಂಬಳ ಸಹ ಬಂದಿರಲಿಲ್ಲವಂತೆ, ಹಿರಿಯ ಅಧಿಕಾರಿಗಳು ಹೇಳಿದ್ರು ನನ್ನ ಗಂಡನಿಗೆ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ರು ಎಂದು ಮೃತ ರಾಜು ಪತ್ನಿ ಪ್ರೇಮಾ ಅವರು ಅರೋಪಿಸಿದ್ದಾರೆ&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಎಲ್ಲರನ್ನೂ ಕ್ಷಮಿಸಿಬಿಡು ಇದು ಹೊರಡುವ ಸಮಯ: ಭಾರವಾದ ಹೃದಯದಿಂದ ಹರೀಶ್ ರಾಣಾ ಕಳಿಸಿಕೊಟ್ಟ ಕುಟುಂಬ&lt;/strong&gt;&lt;/p&gt;&lt;p&gt;ಡೆತ್ ನೋಟ್ ನಲ್ಲಿ ರಾಘವೇಂದ್ರ ಅವರ ಹೆಸರು ಬರೆದು ರಾಜು ಸಾವಿಗೆ ಶರಣಾಗಿದ್ದು, ರಾಘವೇಂದ್ರ ಅವರನ್ನು ಕೆಲಸದಿಂದ ವಜಾ ಮಾಡಬೇಕು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಮೃತ ಪತ್ನಿಗೆ&amp;nbsp;&amp;nbsp;ಸರ್ಕಾರ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.&lt;/p&gt;&lt;p&gt;ವಿಶೇಷ ಮನವಿ:&lt;/p&gt;&lt;p&gt;ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:&lt;/p&gt;&lt;p&gt;Sahai Helpline - 080 2549 7777&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಇರಾನ್-ಇಸ್ರೇಲ್ ಯುದ್ಧ&zwnj; ಎಫೆಕ್ಟ್: ಕಣ್ ಮುಚ್ಚಿ ತೆರೆಯೋಷ್ಟರಲ್ಲಿ ಕಣ್ ಮುಂದೆ ಇದ್ದ ಗ್ಯಾಸ್ ಸಿಲಿಂಡರ್ ನಾಪತ್ತೆ&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ballari</category>
            <dc:creator>Anusha Kb</dc:creator>
            <atom:link href="https://kannada.asianetnews.com/state/ballari-agriculture-department-contract-employee-surrenders-to-death/articleshow-h18zs77"/>
        </item>
        <item>
            <title><![CDATA[ಬಳ್ಳಾರಿ ಸೆಂಟ್ರಲ್ ಜೈಲಲ್ಲಿ ಗಾಂಜಾ ಬೇಕೆಂದು ಜೈಲರ್‌ನನ್ನೇ ಅಟ್ಟಾಡಿಸಿ ಹೊಡೆದ ಕೈದಿಗಳು: ಆಸ್ಪತ್ರೆಗೆ ದಾಖಲು]]></title>
            <link>https://kannada.asianetnews.com/karnataka-districts/ballari-central-jail-inmates-assault-jailer-ashok-hosamani-case-registered-sat/articleshow-h6ethat</link>
            <guid isPermaLink="true">https://kannada.asianetnews.com/karnataka-districts/ballari-central-jail-inmates-assault-jailer-ashok-hosamani-case-registered-sat/articleshow-h6ethat</guid>
            <pubDate>Wed, 08 Apr 2026 19:06:09 +0530</pubDate>
            <description><![CDATA[&lt;p&gt;ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ, ನಿಷೇಧಿತ ವಸ್ತುಗಳ ಪೂರೈಕೆ ನಿಲ್ಲಿಸಿದ್ದಕ್ಕೆ ರೊಚ್ಚಿಗೆದ್ದ ಐವರು ಖೈದಿಗಳು ಜೈಲರ್ ಅಶೋಕ ಹೊಸಮನಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಅಧಿಕಾರಿಗೆ ಚಿಕಿತ್ಸೆ ನೀಡಲಾಗಿದ್ದು, ಹಲ್ಲೆಕೋರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knpmvdzqwvb6ga5s8ephdtzw,imgname-ballari-central-jail-1775655303158.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.08): ಜಿ&lt;/strong&gt;ಲ್ಲೆಯ ಅತ್ಯಂತ ಬಿಗಿ ಭದ್ರತೆಯ ಪ್ರದೇಶವಾಗಿರುವ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಈಗ ಖೈದಿಗಳ ದರ್ಬಾರ್ ಮಿತಿಮೀರಿದೆ. ಜೈಲಿನ ನಿಯಮಗಳನ್ನು ಗಾಳಿಗೆ ತೂರಿದ ಖೈದಿಗಳ ಗುಂಪೊಂದು, ತಮಗೆ ಬೇಕಾದ ಅಮಲು ಪದಾರ್ಥಗಳು ಸಿಗುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಜೈಲರ್ ಮೇಲೆಯೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಬಳ್ಳಾರಿ ಕೇಂದ್ರ ಕಾರಾಗೃಹದ ಜೈಲರ್ ಅಶೋಕ ಹೊಸಮನಿ ಅವರ ಮೇಲೆ ಖೈದಿಗಳು ಹಲ್ಲೆ ನಡೆಸಿದ್ದಾರೆ. ಜೈಲಿನಲ್ಲಿ ಇತ್ತೀಚೆಗೆ ಭದ್ರತೆಯನ್ನು ಕಟ್ಟುನಿಟ್ಟಗೊಳಿಸಲಾಗಿದ್ದು, ಖೈದಿಗಳಿಗೆ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಹಾಗೂ ಗಾಂಜಾ ಸೇರಿದಂತೆ ಯಾವುದೇ ನಿಷೇಧಿತ ವಸ್ತುಗಳು ಸಿಗದಂತೆ ಜೈಲು ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದಿದ್ದ ಕೆಲವು ಖೈದಿಗಳು, ಜೈಲು ಅಧಿಕಾರಿಗಳ ವಿರುದ್ಧವೇ ತಿರುಗಿಬಿದ್ದಿದ್ದಾರೆ.&lt;/p&gt;&lt;h2&gt;&lt;strong&gt;ಹಲ್ಲೆ ನಡೆಸಿದ ಖೈದಿಗಳು ಯಾರು?:&lt;/strong&gt;&lt;/h2&gt;&lt;p&gt;ಜೈಲಿನಲ್ಲಿರುವ ಅಲ್ತಾಪ್, ರಷೀದ್, ವಿನೋದ್, ಸಲೀಂ ಮತ್ತು ರಾಜು ಎನ್ನುವ ಖೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಐವರು ಖೈದಿಗಳು ಮೊದಲಿನಿಂದಲೂ ಜೈಲು ಸಿಬ್ಬಂದಿಯೊಂದಿಗೆ ಬೀಡಿ-ಸಿಗರೇಟ್ ವಿಚಾರದಲ್ಲಿ ತಗಾದೆ ತೆಗೆಯುತ್ತಿದ್ದರು. ಕಳೆದ ಕೆಲವು ದಿನಗಳಿಂದ ಜೈಲಿನೊಳಗೆ ಯಾವುದೇ ವ್ಯಸನಕಾರಿ ವಸ್ತುಗಳು ಸರಬರಾಜು ಆಗದ ಕಾರಣ, ಇವರು ಸಣ್ಣ ವಿಷಯವನ್ನು ದೊಡ್ಡದು ಮಾಡಿ ಜೈಲರ್ ಅಶೋಕ ಹೊಸಮನಿ ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ.&lt;/p&gt;&lt;h3&gt;&lt;strong&gt;ದಾಳಿ ಮತ್ತು ಗಾಯ:&lt;/strong&gt;&lt;/h3&gt;&lt;p&gt;ವಾಗ್ವಾದ ತಾರಕಕ್ಕೇರಿದಾಗ ಈ ಐವರು ಖೈದಿಗಳು ಒಟ್ಟಾಗಿ ಸೇರಿ ಜೈಲರ್ ಅಶೋಕ ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಕೈ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಜೈಲಿನ ಇತರ ಸಿಬ್ಬಂದಿ ತಕ್ಷಣವೇ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಹಲ್ಲೆಗೊಳಗಾದ ಅಧಿಕಾರಿ ಅವರಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಬಳ್ಳಾರಿ ಎಎಸ್ಪಿ (ASP) ನವೀನ್ ಕುಮಾರ್ ಅವರು ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೈಲಿನ ಭದ್ರತೆ ಮತ್ತು ಖೈದಿಗಳ ನಡವಳಿಕೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೈಲಿನೊಳಗೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ದೂರು ದಾಖಲು:&lt;/strong&gt;&lt;/h2&gt;&lt;p&gt;ಜೈಲರ್ ಮೇಲೆ ಹಲ್ಲೆ ನಡೆಸಿದ ಅಲ್ತಾಪ್, ರಷೀದ್, ವಿನೋದ್, ಸಲೀಂ ಮತ್ತು ರಾಜು ಎಂಬ ಐವರು ಖೈದಿಗಳ ವಿರುದ್ಧ ಬಳ್ಳಾರಿಯ ಬ್ರೂಸ್&zwnj;ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಮತ್ತು ಹಲ್ಲೆ ನಡೆಸಿರುವ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದ್ದು, ಇವರ ಮೇಲೆ ಹೆಚ್ಚಿನ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ. ಈ ಘಟನೆಯು ಜೈಲಿನ ಒಳಗಿನ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ಕುಖ್ಯಾತ ಅಪರಾಧಿಗಳು ಅಧಿಕಾರಿಗಳ ಮೇಲೆಯೇ ಕೈ ಮಾಡುವ ಮಟ್ಟಕ್ಕೆ ಬೆಳೆದಿರುವುದು ಆತಂಕಕಾರಿ ಸಂಗತಿಯಾಗಿದೆ.&lt;/p&gt;]]></content:encoded>
            <category>ballari</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/ballari-central-jail-inmates-assault-jailer-ashok-hosamani-case-registered-sat/articleshow-h6ethat"/>
        </item>
        <item>
            <title><![CDATA[ಲೋಕಾಯುಕ್ತ ದಾಳಿ: ಬಳ್ಳಾರಿ ಅಧಿಕಾರಿ ಬಳಿ 44 ಎಕರೆ, 14 ಸೈಟ್‌, 3 ಮನೆ!]]></title>
            <link>https://kannada.asianetnews.com/state/lokayukta-raids-corrupt-officials-bellary-official-owns-44-acres-14-sites-3-houses-rav/articleshow-hn2bk2r</link>
            <guid isPermaLink="true">https://kannada.asianetnews.com/state/lokayukta-raids-corrupt-officials-bellary-official-owns-44-acres-14-sites-3-houses-rav/articleshow-hn2bk2r</guid>
            <pubDate>Wed, 08 Apr 2026 09:36:55 +0530</pubDate>
            <description><![CDATA[ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ 8 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 36.92 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚರ ಹಾಗೂ ಸ್ಥಿರಾಸ್ತಿ ಪತ್ತೆಯಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knnkykqwbjswxbmn536z3d2c,imgname----------------------96--1775620804348.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಏ.8): &lt;/strong&gt;ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರು. ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಿದ್ದಾರೆ.&lt;/p&gt;&lt;p&gt;ಕೊಡಗು, ಬೆಳಗಾವಿ, ಬೀದರ್&zwnj;, ಮೈಸೂರು, ಶಿವಮೊಗ್ಗ, ಮಂಗಳೂರು, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 35 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಕೃಷಿ ಜಮೀನು, ನಿವೇಶನ, ಐಷಾರಾಮಿ ಮನೆಗಳು, ದುಬಾರಿ ವಸ್ತುಗಳು, ಚಿನ್ನಾಭರಣ, ನಗದು ಸೇರಿದಂತೆ ಒಟ್ಟು 36.92 ಕೋಟಿ ರು. ಮೌಲ್ಯದ ಅಸಮತೋಲನ ಆಸ್ತಿ ಪತ್ತೆ ಹಚ್ಚಿದ್ದಾರೆ. ದಾಳಿಗೊಳಗಾದ 8 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಆಯಾ ಜಿಲ್ಲಾ ಲೋಕಾಯುಕ್ತ ಪೊಲೀಸ್&zwnj; ಠಾಣೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h2&gt;ಯಾವ ಅಧಿಕಾರಿ ಬಳಿ ಎಷ್ಟು ಆಸ್ತಿ?&lt;/h2&gt;&lt;p&gt;\\B1. ಜಿ.ಕೆ.ರೇವಣ್&zwnj; ಕುಮಾರ್&zwnj; ( ಸಹಾಯ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ, ಲೋಕೋಪಯೋಗಿ ಇಲಾಖೆ, ಉಪ ವಿಭಾಗ, ಮೈಸೂರು):\\B 3 ಕಡೆ ದಾಳಿ, 4 ಸೈಟ್&zwnj;, 1 ಮನೆ, 2 ಎಕರೆ ಕೃಷಿ ಜಮೀನು, 2.96 ಕೋಟಿ ರು.ನ ಚಿನ್ನಾಭರಣ, 42.22 ಲಕ್ಷ ರು. ಮೌಲ್ಯದ ವಾಹನ ಸೇರಿ ಒಟ್ಟು 4.27 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;. ಅಜಯ್&zwnj; ಸಿಂಗ್&zwnj; (ಸಹಾಯಕ ಕಾರ್ಯಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿ ಕಚೇರಿ, ಬೆಳಗಾವಿ): 7 ಕಡೆ ದಾಳಿ, 7 ಸೈಟ್&zwnj;, 3 ಮನೆ, 12 ಎಕರೆ ಕೃಷಿ ಜಮೀನು, 6.22 ಲಕ್ಷ ರು. ನಗದು, 54.32 ಲಕ್ಷ ರು. ಮೌಲ್ಯದ ಚಿನ್ನಾಭರಣ, 19 ಲಕ್ಷ ರು.ನ ವಾಹನ, 2.35 ಕೋಟಿ ರು. ಬ್ಯಾಂಕ್&zwnj; ಠೇವಣಿ ಸೇರಿದಂತೆ ಒಟ್ಟು 5.81 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;. ಬಿ.ಎನ್&zwnj;.ಬಾಬು (ಸಹಾಯಕ ಔಷಧ ನಿಯಂತ್ರಕ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು):\\B 6 ಕಡೆ ದಾಳಿ, 4 ಸೈಟ್&zwnj;, 5 ಮನೆ, 1.20 ಎಕರೆ ಕೃಷಿ ಜಮೀನು, 25.96 ಲಕ್ಷ ರು. ನಗದು, 1.66 ಕೋಟಿ ರು. ಬ್ಯಾಂಕ್&zwnj; ಠೇವಣಿ ಸೇರಿ ಒಟ್ಟು 4.40 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;.ಎಚ್&zwnj;.ಜಿ.ಸುಶೀಲಮ್ಮ (ಸಹಾಯಕ ಲೆಕ್ಕಾಧಿಕಾರಿ, ನಿರ್ಮಿತಿ ಕೇಂದ್ರ, ಚಿತ್ರದುರ್ಗ ಜಿಲ್ಲೆ ):\\B 2 ಕಡೆ ದಾಳಿ, 13 ಸೈಟ್&zwnj;, 6 ಮನೆ, 1 ಕಾಂಪ್ಲೆಕ್ಸ್&zwnj;, 34.2 ಎಕರೆ ಕೃಷಿ ಜಮೀನು, 85.90 ಲಕ್ಷ ರು. ಮೌಲ್ಯದ ಇತರೆ ವಸ್ತು ಸೇರಿ ಒಟ್ಟು 8.32 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;. ಕೆ.ಆರ್&zwnj;.ಶೋಭಾ (ಜಿಲ್ಲಾ ಅಧಿಕಾರಿ, ಅರಸು ಹಿಂ. ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ):\\B 6 ಕಡೆ ದಾಳಿ, 2 ಸೈಟ್&zwnj;, 1 ಮನೆ, 4.8 ಎಕರೆ ಕೃಷಿ ಜಮೀನು, 57.40 ಲಕ್ಷ ರು.ನ ಚಿನ್ನಾಭರಣ, 1.23 ಕೋಟಿ ರು.ನ ವಾಹನ, ಸೇರಿ ಒಟ್ಟು 3.88 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;6.ಶಿವಣ್ಣ (ಸಹಾಯಕ ನಿರ್ದೇಶಕ, ಮೀನುಗಾರಿಕೆ ಇಲಾಖೆ, ಬಳ್ಳಾರಿ):\\B 5 ಕಡೆ ದಾಳಿ, 14 ಸೈಟ್&zwnj;, 3 ಮನೆ, 44 ಎಕರೆ ಕೃಷಿ ಜಮೀನು, 28 ಲಕ್ಷ ರು. ನಗದು ಸೇರಿ ಒಟ್ಟು 2.82 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;7. ಕೆ.ಎಲ್&zwnj;.ಸುರೇಶ್&zwnj; (ಹಣಕಾಸು ನಿಯಂತ್ರಕ(ನಿವೃತ್ತ), ಕರ್ನಾಟಕ ಪಶು ವಿಜ್ಞಾನ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ಬೀದರ್&zwnj;):\\B 2 ಕಡೆ ದಾಳಿ, 2 ಸೈಟ್&zwnj;, 2 ಮನೆ, 3.34 ಎಕರೆ ಕೃಷಿ ಜಮೀನು ಸೇರಿ ಒಟ್ಟು 4.38 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;8. ಐ.ಕೆ.ಪುಟ್ಟಸ್ವಾಮಿ (ಸಹಾಯಕ ಕಾರ್ಯಪಾಲಕ ಅಭಿಯಂತರ, ಹಾರಂಗಿ ಉಪ ವಿಭಾಗ, ಕಾವೇರಿ ನೀರಾವರಿ ನಿಗಮ, ಹಾರಂಗಿ ಪುನರ್ವಸತಿ ವಿಭಾಗ ಕಚೇರಿ, ಕುಶಾಲನಗರ):\\B 4 ಕಡೆ ದಾಳಿ, 6 ಸೈಟ್&zwnj;, 1 ಮನೆ, 51.30 ಲಕ್ಷ ರು.ನ ಚಿನ್ನಾಭರಣ ಸೇರಿ ಒಟ್ಟು 2.99 ಕೋಟಿ ರು. ಮೌಲ್ಯದ ಆಸ್ತಿ.&lt;/p&gt;&lt;p&gt;&lt;strong&gt;ಪತ್ತೆಯಾದ ಅಕ್ರಮ ಆಸ್ತಿ ವಿವರ&lt;/strong&gt;&lt;/p&gt;&lt;p&gt;* 21.71 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಪತ್ತೆ&lt;/p&gt;&lt;p&gt;* 15.21 ಕೋಟಿ ರು. ಮೌಲ್ಯದ ಚರಾಸ್ತಿ ಪತ್ತೆ&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/lokayukta-raids-corrupt-officials-bellary-official-owns-44-acres-14-sites-3-houses-rav/articleshow-hn2bk2r"/>
        </item>
        <item>
            <title><![CDATA[ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ:  5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ]]></title>
            <link>https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi</link>
            <guid isPermaLink="true">https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi</guid>
            <pubDate>Tue, 07 Apr 2026 13:39:36 +0530</pubDate>
            <description><![CDATA[ಕರ್ನಾಟಕದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knkfhg7nx4mhvqasnb7ez237,imgname-lokayukta-raids-1775549071605.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ. ಈ ಮೂಲಕ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಸಮಗ್ರ ದಾಳಿಗಳು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿವೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ.&lt;/p&gt;&lt;h2&gt;ಚಿತ್ರದುರ್ಗದಲ್ಲಿ ವಿ.ಆರ್.ಎಸ್ ಪಡೆದ ಮಹಿಳಾ ಅಧಿಕಾರಿ ಮನೆ ಮೇಲೆ ದಾಳಿ&lt;/h2&gt;&lt;p&gt;ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೆದೇಹಳ್ಳಿ ಬಡಾವಣೆಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಒಂದು ವರ್ಷದ ಹಿಂದೆ ವಿ.ಆರ್.ಎಸ್ ಪಡೆದಿದ್ದ ಸುಶೀಲಮ್ಮ ಅವರು ಸೇವೆಯಲ್ಲಿದ್ದಾಗ ಭ್ರಷ್ಟಾಚಾರ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲೋಕಾಯುಕ್ತ ಎಸ್&zwnj;ಪಿ ವಾಸುದೇವರಾಮ್ ಹಾಗೂ ಡಿವೈಎಸ್ಪಿ ಮೃತ್ಯುಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ.&lt;/p&gt;&lt;h2&gt;ಮೈಸೂರು AEE ಮನೆಗೆ ದಾಳಿ&lt;/h2&gt;&lt;p&gt;ಮೈಸೂರು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ರೇವಣ್ಣ ವಿರುದ್ಧವೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮೈಸೂರಿನ ಕಚೇರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿರುವ ಎರಡು ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಎಸ್&zwnj;ಪಿ ಟಿ.ಜೆ. ಉದೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಶೈಲೇಂದ್ರ ಮತ್ತು ವೆಂಕಟೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್&zwnj;ಪೆಕ್ಟರ್ ಶಶಿಕುಮಾರ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.&lt;/p&gt;&lt;h2&gt;ಬಳ್ಳಾರಿ ಮೀನುಗಾರಿಕಾ ಇಲಾಖೆಯ ನಿರ್ದೇಶಕನಿಗೆ ಸೇರಿದ &amp;nbsp;4 ಸ್ಥಳಗಳಲ್ಲಿ ದಾಳಿ&lt;/h2&gt;&lt;p&gt;ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ. ಸಿದ್ಧಾರ್ಥನಗರದಲ್ಲಿರುವ ನಿವಾಸ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಶಿವಣ್ಣ ವಿರುದ್ಧ 10ಕ್ಕೂ ಹೆಚ್ಚು ದೂರುಗಳು ಲೋಕಾಯುಕ್ತರಿಗೆ ಸಲ್ಲಿಕೆಯಾಗಿದ್ದವು ಎನ್ನಲಾಗಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆದಾಯ ಗಳಿಕೆ ಆರೋಪಗಳ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಅವರು ಬಳಸುತ್ತಿದ್ದ ಸರ್ಕಾರಿ ಬೊಲೆರೋ ವಾಹನದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿರುವುದು ಕೂಡ ಗಮನಾರ್ಹ ಸಂಗತಿಯಾಗಿದೆ.&lt;/p&gt;&lt;h2&gt;ಶಿವಮೊಗ್ಗ ಜಿಲ್ಲಾಧಿಕಾರಿ ಶೋಭಾ ಕೆ.ಆರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ&lt;/h2&gt;&lt;p&gt;ಶಿವಮೊಗ್ಗದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶೋಭಾ ಕೆ.ಆರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕಾರಿಪುರದ ಮನೆ, ತರಲಘಟ್ಟದ ಫಾರ್ಮ್ ಹೌಸ್, ಆಚಾಪುರದಲ್ಲಿರುವ ಶಾಲೆ ಸೇರಿದಂತೆ ಒಟ್ಟು ನಾಲ್ಕು ಕಡೆ ಪರಿಶೀಲನೆ ನಡೆದಿದೆ. ಜೊತೆಗೆ ಅವರ ಸಹೋದ್ಯೋಗಿ ರಾಘವೇಂದ್ರ ಅವರ ಚಾಲುಕ್ಯನಗರ ನಿವಾಸದಲ್ಲಿಯೂ ಶೋಧ ಕಾರ್ಯ ನಡೆದಿದೆ. ಲೋಕಾಯುಕ್ತ ಎಸ್&zwnj;ಪಿ ಕೌಲಾಂಪುರ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ.&lt;/p&gt;&lt;h2&gt;ಬೆಳಗಾವಿಯಲ್ಲಿ ಮಧನಸಿಂಗ ರಜಪೂತ್ ವಿರುದ್ಧ ಭ್ರಷ್ಟಾಚಾರ ಆರೋಪ&lt;/h2&gt;&lt;p&gt;ಬೆಳಗಾವಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಸದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಧನಸಿಂಗ ರಜಪೂತ್ ವಿರುದ್ಧವೂ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತ ದಾಳಿ ನಡೆದಿದೆ. ಆಂಜನೇಯನಗರದಲ್ಲಿರುವ ಮನೆ ಸೇರಿದಂತೆ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಹುಕ್ಕೇರಿ ಹಾಗೂ ಅಥಣಿ ತಾಲೂಕಿನ ನಿವಾಸಗಳಲ್ಲಿಯೂ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನಾಭರಣ ಹಾಗೂ ಬ್ಯಾಂಕ್ ಠೇವಣಿಗಳ ಕುರಿತು ಮಹತ್ವದ ದಾಖಲೆಗಳು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಡಿಎಸ್ಪಿಗಳಾದ ಬಿ.ಎಸ್. ಪಾಟೀಲ ಮತ್ತು ಭರತ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ಮುಂದುವರಿದಿದ್ದು, ದಾಖಲೆಗಳ ಪರಿಶೀಲನೆ ಇನ್ನೂ ನಡೆಯುತ್ತಿದೆ. ಒಟ್ಟಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೇ ಸಮಯದಲ್ಲಿ ನಡೆದ ಈ ಲೋಕಾಯುಕ್ತ ದಾಳಿಗಳು ಭ್ರಷ್ಟಾಚಾರ ವಿರುದ್ಧದ ಕಠಿಣ ಕ್ರಮದ ಸೂಚನೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಹಿರಂಗವಾಗುವ ಸಾಧ್ಯತೆ ಇದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi"/>
        </item>
        <item>
            <title><![CDATA[ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲು ಖೈದಿಗೆ ಫಸ್ಟ್ ಕ್ಲಾಸ್, ಶೇ.81 ಫಲಿತಾಂಶ]]></title>
            <link>https://kannada.asianetnews.com/karnataka-districts/ballari-central-jail-inmate-scores-81-percentage-in-2nd-puc-exams-secures-first-class/articleshow-ovsc1ti</link>
            <guid isPermaLink="true">https://kannada.asianetnews.com/karnataka-districts/ballari-central-jail-inmate-scores-81-percentage-in-2nd-puc-exams-secures-first-class/articleshow-ovsc1ti</guid>
            <pubDate>Thu, 09 Apr 2026 23:37:38 +0530</pubDate>
            <description><![CDATA[&lt;p&gt;ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲು ಖೈದಿಗೆ ಫಸ್ಟ್ ಕ್ಲಾಸ್, ಶೇ.81 ಫಲಿತಾಂಶ ಪಡೆದು ಪಾಸ್ ಆಗಿದ್ದಾರೆ. ಕೊಲೆ ಆರೋಪದಡಿ ಕಳೆದ 7 ವರ್ಷದಿಂದ ಜೈಲು ಶಿಕ್ಷೆಯಲ್ಲಿರುವ ಖೈದಿ ಈ ಸಾಧನೆ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knspsn127kfpnfw8tf7rh67q,imgname-ashok-kumar-ballari-jail-puc-result-1775758005281.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.09) &lt;/strong&gt;ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಎಂದಿನಂತೆ ಮೊದಲೆರೆಡು ಸ್ಥಾನ ಹಂಚಿಕೊಂಡಿದೆ. ರಾಯಚೂರು, ಯಾದಗಿರಿ ಕೊನೆಯ ಎರಡು ಸ್ಥಾನ ಹಂಚಿಕೊಂಡಿದೆ. ರಾಜ್ಯಕ್ಕೆ ಪ್ರಥಮ ಸೇರಿದಂತೆ ಹಲವು ವಿದ್ಯಾರ್ಥಿಗಳು ಅಡತಡೆ ದಾಟಿ ಸಾಧನೆ ಮಾಡಿದ್ದಾರೆ. ಇದೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲು ಖೀದಿ ಫಸ್ಟ್ ಕ್ಲಾಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಕಳೆದ 7 ವರ್ಷಗಳಿಂದ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಆರೋಪಿ ಆಶೋಕ್ ಕುಮಾರ್ ಶೇಕಡಾ 81 ರಷ್ಟುಅಂಕ ಪಡೆದಿದ್ದಾರೆ.&lt;/p&gt;&lt;h2&gt;ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ ಅಶೋಕ್ ಕುಮಾರ್&lt;/h2&gt;&lt;p&gt;ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಶೋಕ್ ಕುಮಾರ್ ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನಲ್ಲೇ ಇದ್ದುಕೊಂಡೇ ದ್ವಿತೀಯ ಪಿಯುಸಿ ಪರೀಕ್ಷೆ ತಯಾರಿ ಮಾಡಿದ ಅಶೋಕ್ ಕುಮಾರ್, ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಸಾಧನೆ ಮಾಡಿದ್ದಾರೆ.&lt;/p&gt;&lt;p&gt;600ಕ್ಕೆ 481 ಅಂಕ ಪಡೆಯುವ ಮೂಲಕ ಶೇಖಡಾ 81% ಫಲಿತಾಂಶ ಪಡೆದಿದ್ದಾರೆ. ಕನ್ನಡ 82, ಇಂಗ್ಲಿಷ್ 69, ಇತಿಹಾಸ 94, ಅರ್ತಶಾಸ್ತ್ರ 84, ಸಮಾಜಶಾಸ್ತ್ರ 77, ರಾಜ್ಯಶಾಸ್ತ್ರ75 ಅಂಕ ಪಡೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್ ನಲ್ಲಿಯೇ ಅಭ್ಯಾಸ ಮಾಡಿದ್ದ ಅಪರಾಧಿ ಅಶೋಕ್ ಕುಮಾರ್, ಇದೀಗ ಫಸ್ಟ್ ಕ್ಲಾಸ್ ಮಾರ್ಕ್ಸ್&zwnj;ನೊಂದಿಗೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಶೋಕ್ ಕುಮಾರ್ ಜೈಲಿನಲ್ಲಿ ಓದುವ ಅಭ್ಯಾಸ ಬೆಳೆಸಿಕೊಂಡಿದ್ದರು.&lt;/p&gt;&lt;p&gt;ಈ ಬಾರಿಯ ದ್ವಿತೀಯ ಪಿಯಿಸು ಪರೀಕ್ಷೆಯಲ್ಲಿ ರಾಜ್ಯದ ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,10,363 ವಿದ್ಯಾರ್ಥಿಗಳ ಪೈಕಿ 6.1 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯುಸಿ ಪರೀಕ್ಷೆ ಫಲಿತಾಂಶಧ ತೇರ್ಗಡೆಯಲ್ಲಿ ದಾಖಲೆಯ ಏರಿಕೆ ಕಂಡಿದೆ. ಈ ಬಾರಿ 35 ಇದಿದ್ದ ಪಾಸಿಂಗ್ ಅಂಕವನ್ನು 33ಕ್ಕೆ ಇಳಿಸಲಾಗಿತ್ತು. ಇದು ವಿದ್ಯಾರ್ಥಿಗಳ ತೇರ್ಗಡೆ ವಿಚಾರದಲ್ಲೂ ಮಹತ್ತರ ಬದಲಾವಣೆಗೆ ಕಾರಣವಾಗಿದೆ.&lt;/p&gt;&lt;p&gt;ಫಲಿತಾಂಶ ಬಿಡುಗಡೆ ಮಾಡಿದ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಇತಿಹಾಸ ಸೃಷ್ಟಿ ಮಾಡಿದ ಮಕ್ಕಳಿದೆ ಧನ್ಯವಾದ ಹೇಳಿದ್ದಾರೆ. ಇದೇ ವೇಳೆ ಪರೀಕ್ಷೆಯಲ್ಲಿ ತೇರ್ಗಡೆ ಆಗದ ಮಕ್ಕಳು ನಿರಾಶರಾಗಬೇಕಿಲ್ಲ. ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವಿದೆ ಎಂದಿದ್ದಾರೆ. ಆತ್ಮವಿಶ್ವಾಸದಿಂದ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶವಿದೆ. ಹೀಗಾಗಿ ಉತ್ತಮ ತಯಾರಿಯೊಂದಿಗೆ ಪರೀಕ್ಷೆ ಬರೆಯಲು ಮಧು ಬಂಗಾರಪ್ಪ ಹೇಳಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ 13.03 % ಫಲಿತಾಂಶ ಹೆಚ್ಚಳ ಆಗಿದೆ ಎಂದಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/ballari-central-jail-inmate-scores-81-percentage-in-2nd-puc-exams-secures-first-class/articleshow-ovsc1ti"/>
        </item>
        <item>
            <title><![CDATA[ಚೀಟಿ ಹೆಸರಲ್ಲಿ ಜನರಿಗೆ ಲಕ್ಷ ಲಕ್ಷ ರೂ. ನಾಮ ಹಾಕಿದ್ದ ಬಳ್ಳಾರಿಯ ವೆಂಕಟೇಶನ ಕಡೆಗೂ ಬಂಧಿಸಿದ ಪೊಲೀಸರು]]></title>
            <link>https://kannada.asianetnews.com/state/chit-fund-fraud-ballari-police-finally-arrest-main-accused-venkatesh/articleshow-pkxg46w</link>
            <guid isPermaLink="true">https://kannada.asianetnews.com/state/chit-fund-fraud-ballari-police-finally-arrest-main-accused-venkatesh/articleshow-pkxg46w</guid>
            <pubDate>Mon, 16 Mar 2026 12:37:40 +0530</pubDate>
            <description><![CDATA[&lt;p&gt;ಬಳ್ಳಾರಿಯಲ್ಲಿ ಚೀಟಿ ವ್ಯವಹಾರದ ಹೆಸರಿನಲ್ಲಿ 700ಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ನಾಲ್ಕು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ವೆಂಕಟೇಶ್&zwnj;ನನ್ನು ಬ್ರೂಸ್&zwnj;ಪೇಟೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kktqc5ecc9w7ym50ypvdeyvt,imgname-ballari-chit-fund-fraud-case-1773644682700.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಳ್ಳಾರಿ: ಚೀಟಿ ಹೆಸರಲ್ಲಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆದು ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ವೆಂಕಟೇಶ್&zwnj;ನನ್ನು ಬ್ರೂಸ್&zwnj;ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವೆಂಕಟೇಶ್ ಚೀಟಿ ವ್ಯವಹಾರ ನಡೆಸುತ್ತಿದ್ದ. ಈತನ ಬಳಿ ಅನೇಕರು ಹಣ ಹೂಡಿಕೆ ಮಾಡಿದ್ದರು. ಆದರೆ ಚೀಟಿ ವ್ಯವಹಾರ ನಡೆಸುತ್ತಿದ್ದ ವೆಂಕಟೇಶ್ ಕಳೆದ 4 ತಿಂಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ.&lt;/p&gt;&lt;p&gt;ಈಗ ಬಳ್ಳಾರಿಯ ಬ್ರೂಸ್ ಪೇಟ್ ಪೊಲೀಸರು ಕಡೆಗೂ ವೆಂಕಟೇಶ್&zwnj;ನನ್ನು ಬಂಧಿಸಿದ್ದಾರೆ. ವೆಂಕಟೇಶ್ ನಾಪತ್ತೆಯಾಗಿದ್ದರಿಂದ ಆತನ ಜೊತೆ ಚೀಟಿ ವ್ಯವಹಾರಕ್ಕೆ ಹಣ ಹೂಡಿಕೆ ಮಾಡಿದ್ದ ಜನರು ಕಂಗಾಲಾಗಿದ್ದರು. ಪೊಲೀಸರು ಈ ಆರೋಪಿ ವೆಂಕಟೇಶ್&zwnj;ನನ್ನು ಹುಡುಕುವಲ್ಲಿ ವಿಳಂಬ ಮಾಡ್ತಿದ್ದಾರೆಂದು ಕಳೆದ ಹದಿನೈದು ದಿನಗಳ ಹಿಂದೆ ಹಣ ಕಳೆದುಕೊಂಡ ಸಂತ್ರಸ್ತರು ಶಾಸಕ ಭರತ್ ರೆಡ್ಡಿ ಯೊಂದಿಗೆ ಠಾಣೆಗೆ ಬಂದಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಲಬುರಗಿ: 8 ದಿನದ ಕರುವನ್ನು ತೊಟ್ಟಿಲಲ್ಲಿ ಮಲಗಿಸಿ ಅದ್ದೂರಿ ನಾಮಕರಣ: ಗೋ ಸೇವಕರಿಗೆ ಸನ್ಮಾನ&lt;/strong&gt;&lt;/p&gt;&lt;p&gt;ಈಗ ಕೊನೆಗೂ ಆರೋಪಿ ವೆಂಕಟೇಶ ಬಂಧಿಸುವಲ್ಲಿ ಪೊಲೀಸರು ಯಶಸ್ಸಿಯಾಗಿದ್ದಾರೆ. ಬಂಧಿತ ವೆಂಕಟೇಶ್ ಬಳ್ಳಾರಿ ಹವಂಬಾವಿ ಪ್ರದೇಶದ ನಿವಾಸಿಯಾಗಿದ್ದು, ವೆಂಕಟೇಶ ಜೊತೆಗಿದ್ದ ಪಾರ್ಟನರ್ ಸಲೀಂ, ವೆಂಕಟೇಶ ಅಳಿಯ ಸಚಿನ್ ಮತ್ತು ವೆಂಕಟೇಶ ಪತ್ನಿ ಸರೋಜ ಕೂಡ ನಾಪತ್ತೆಯಾಗಿದ್ದರು.&lt;/p&gt;&lt;p&gt;ಆರೋಪಿಗಳು ತರಕಾರಿ, ಹೂ, ಚಹಾ ಮಾರಾಟ ಮಾಡುವವರು, ಹಮಾಲಿ, ದಿನಗೂಲಿ ಕಾರ್ಮಿಕರು ಸೇರಿದಂತೆ ಮತ್ತಿತರ 700ಕ್ಕೂ ಹೆಚ್ಚಿನ ಜನರಿಂದ ಕಂತಿನ ಮೂಲಕ ಚೀಟಿ ಹಣ ಕಟ್ಟಿಸಿ ಕೊಂಡಿದ್ರು. ಆದರೆ ಚೀಟಿ ಎತ್ತಿದವರಿಗೆ ಹಣ ನೀಡುವ ಮುನ್ನವೇ ವೆಂಕಟೇಶ್&zwnj; ಪರಾರಿಯಾಗಿದ್ದ.&lt;/p&gt;&lt;p&gt;ಆದರೆ ಈಗ ಚಿತ್ರದುರ್ಗದಲ್ಲಿ ಅರೋಪಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆ, ಶಿಕ್ಷಣ, ವಸತಿ ನಿವೇಶನ ಖರೀದಿ, ಆಭರಣ ಕೊಳ್ಳುವುದು ಸೇರಿದಂತೆ ವಿವಿಧ ಕಾರಣಕ್ಕೆ ಈತನ ಬಳಿ ಚೀಟಿ ಕಟ್ಟಿರುವ ಜನರು ಇದೀಗ ಕಟ್ಟಿದ ಹಣ ಸಿಗದೇ ಗೋಳಾಡುತ್ತಿದ್ದಾರೆ. ಈತ ಹತ್ತು ಸಾವಿರದಿಂದ ಹತ್ತು ಲಕ್ಷದವರೆಗೂ ಚೀಟಿ&zwnj; ವ್ಯವಹಾರ ನಡೆಸುತ್ತಿದ್ದ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಆಹಾರ ಅರಸಿ ಬಂದ ಕರಡಿ ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣ ಸಾವು&lt;/strong&gt;&lt;/p&gt;]]></content:encoded>
            <category>ballari</category>
            <dc:creator>Anusha Kb</dc:creator>
            <atom:link href="https://kannada.asianetnews.com/state/chit-fund-fraud-ballari-police-finally-arrest-main-accused-venkatesh/articleshow-pkxg46w"/>
        </item>
        <item>
            <title><![CDATA[ಮೀಸಲಾತಿ ಹೆಚ್ಚಳಕ್ಕೆ 9ನೇ ಶೆಡ್ಯೂಲ್‌ಗೆ ಸೇರಿಸಲು ಕೇಂದ್ರ ಬಳಿ ನಿಯೋಗ: ವಿ.ಎಸ್.ಉಗ್ರಪ್ಪ]]></title>
            <link>https://kannada.asianetnews.com/karnataka-districts/vs-ugrappa-sc-st-obc-reservation-protest-warning-karnataka-gvd/articleshow-qfvogi6</link>
            <guid isPermaLink="true">https://kannada.asianetnews.com/karnataka-districts/vs-ugrappa-sc-st-obc-reservation-protest-warning-karnataka-gvd/articleshow-qfvogi6</guid>
            <pubDate>Mon, 20 Apr 2026 17:23:42 +0530</pubDate>
            <description><![CDATA[&lt;p&gt;ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಮಂತ್ರಿ ಭೇಟಿ ಮಾಡಿ ಒಂಬತ್ತನೇ ಶೆಡ್ಯೂಲ್&zwnj;ಗೆ ಸೇರಿಸಲು ಪ್ರಯತ್ನಿಸಬೇಕು ಎಂದು ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-eb5f40e5-a75e-44b5-bdbd-60ab59c2a3d6,imgname-image.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.20): &lt;/strong&gt;ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಮಂತ್ರಿ ಭೇಟಿ ಮಾಡಿ ಒಂಬತ್ತನೇ ಶೆಡ್ಯೂಲ್&zwnj;ಗೆ ಸೇರಿಸಲು ಪ್ರಯತ್ನಿಸಬೇಕು. ಜೂನ್ ವೇಳೆಗೆ ರಾಜ್ಯ ಸರ್ಕಾರ ನಿಯೋಗ ತೆರಳದಿದ್ದರೆ ರಾಜ್ಯವ್ಯಾಪಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಮುಖ್ಯಮಂತ್ರಿ ಸಹ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರದ ಬಳಿ ತೆಗೆದುಕೊಂಡು ಹೋಗುವ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದು ನಿಜ ಎಂದರು.&lt;/p&gt;&lt;p&gt;&lt;strong&gt;ಎಸ್&zwnj; ಆರ್&zwnj; ನೋ ಎಂದು ಹೇಳಲಿ:&lt;/strong&gt; ಮುಖ್ಯಮಂತ್ರಿ ನಿಯೋಗ ಕರೆದುಕೊಂಡು ಹೋಗುವ ವಿಚಾರದಲ್ಲಿ ಎಸ್ ಅಥವಾ ನೋ ಎಂಬುದನ್ನಷ್ಟೇ ಹೇಳಲಿ. ವಿನಾಕಾರಣ ಮುಂದೂಡುವುದನ್ನು ಸಹಿಸುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ನಡೆದುಕೊಂಡರೆ ಹೋರಾಟದ ಮೂಲಕ ಉತ್ತರ ನೀಡುತ್ತೇವೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಎಸ್ಟಿ ಸಮುದಾಯಕ್ಕೆ ಶೇ.3ರಿಂದ 7 ಮತ್ತು ಎಸ್ಸಿ ಸಮುದಾಯಕ್ಕೆ ಶೇ.15ರಿಂದ 17ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಒಟ್ಟಾರೆಯಾಗಿ ಶೇ.50 ಇದ್ದ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಳ ಮಾಡಿದರು.&lt;/p&gt;&lt;p&gt;ಆದರೆ, ಸಾಂವಿಧಾನಿಕ ಸಿಂಧುತ್ವ ಕೊಡಿಸುವ ಯಾವ ಮಾರ್ಗಗಳನ್ನು ಅನುಸರಿಸಲಿಲ್ಲ. ಅವರ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಶೇ.56 ಮೀಸಲಾತಿಯನ್ನು ಒಂಬತ್ತನೇ ಶೆಡ್ಯೂಲ್&zwnj;ಗೆ ಸೇರಿಸಿ, ಮೀಸಲಾತಿಗೆ ಸಾಂವಿಧಾನಿಕ ಸಿಂಧುತ್ವ ದೊರಕಿಸಲು ಮುತುವರ್ಜಿ ವಹಿಸಲಿಲ್ಲ. 2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್&zwnj; ಸರ್ಕಾರಕ್ಕೆ ಸಹ ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬರೀ ಮುಂದೂಡುವ ಕೆಲಸವಷ್ಟೇ ಆಯಿತು ಎಂದು ಬೇಸರ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಕುಲಶಾಸ್ತ್ರ ಅಧ್ಯಯನವಾದರೆ ಎಸ್ಟಿಗೆ ಸೇರ್ಪಡೆ:&lt;/strong&gt; ಕುರುಬ, ಗೊಲ್ಲ, ಕೋಳಿ ಸಮುದಾಯ ಸೇರಿದಂತೆ ಅನೇಕ ಸಮುದಾಯಗಳು ಎಸ್ಟಿಗೆ ಸೇರಿಸುವ ಕುರಿತು ಸರ್ಕಾರಕ್ಕೆ ಮನವಿ ಮಾಡಿವೆ. ಅರ್ಹತೆಯಿರುವ ಸಮುದಾಯಗಳನ್ನು ಎಸ್ಟಿಗೆ ಸೇರಿಸಲು ನಮ್ಮದು ಯಾವ ಅಭ್ಯಂತರವಿಲ್ಲ. ಆದರೆ, ಆಯಾ ಸಮುದಾಯದ ಕುಲಶಾಸ್ತ್ರ ಅಧ್ಯಯನ ಆಗಬೇಕು ಎಂದು ವಿ.ಎಸ್&zwnj;.ಉಗ್ರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಜೋಳದರಾಶಿ ತಿಮ್ಮಪ್ಪ, ನರಸಿಂಹಯ್ಯ, ಕೆ.ಆರ್&zwnj;.ರಾಜಪ್ಪ, ರಾಜಣ್ಣ, ವೆಂಕಟೇಶ್&zwnj; ನಾಯಕ, ಲೋಕೇಶ್&zwnj; ನಾಯಕ, ಜಗನ್&zwnj;, ಕಲ್ಲುಕಂಬ ಪಂಪಾಪತಿ, ವೆಂಕಟೇಶ್&zwnj; ಹೆಗಡೆ, ಎರ್ರಿಸ್ವಾಮಿ, ಹನುಮಂತರಾಯಪ್ಪ ಇತರರಿದ್ದರು.&lt;/p&gt;&lt;h2&gt;&lt;strong&gt;ಎ ರೆಡ್ಡಿ-ಬಿ ರೆಡ್ಡಿ ಸಮಾಜಕ್ಕೆ ಮಾಡಿದ್ದೇನು?&lt;/strong&gt;&lt;/h2&gt;&lt;p&gt;ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿ ನಡೆದ ಬ್ಯಾನರ್&zwnj; ಗಲಾಟೆ ಮಾಡಿದ &quot;ಎ&quot; ರೆಡ್ಡಿ ಮತ್ತು &quot;ಬಿ&quot;ರೆಡ್ಡಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಕೊಡುಗೆ ಏನು? ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದರು. ಈ ಇಬ್ಬರು ರೆಡ್ಡಿಗಳು ನಮ್ಮ ಸಮಾಜದ ಜನರಿಗೆ ಏನಾದರೂ ಸಹಾಯ ಮಾಡಿದ್ದಾರಾ? ವಿಧಾನಸಭೆಗಳಲ್ಲಿ ಮೀಸಲಾತಿ ಹೆಚ್ಚಿಸುವ ಸಂಬಂಧ 9ನೇ ಶೆಡ್ಯೂಲ್ ಕುರಿತು ಪ್ರಸ್ತಾಪ ಮಾಡಿದ್ದಾರಾ? ಯಾರಿಗಾದರೂ ಟ್ರ್ಯಾಕ್ಟರ್ ಕೊಡಿಸಿದ್ದಾರಾ? ಮಕ್ಕಳಿಗೆ ಸ್ಕಾಲರ್&zwnj;ಶಿಪ್&zwnj; ನೀಡಿದ್ದಾರಾ? ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದರು.&lt;/p&gt;]]></content:encoded>
            <category>ballari</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/vs-ugrappa-sc-st-obc-reservation-protest-warning-karnataka-gvd/articleshow-qfvogi6"/>
        </item>
        <item>
            <title><![CDATA[ಬಿಜೆಪಿ ಶುದ್ಧೀಕರಣವಾಗಲೆಂದು ಹೊರ ಬಂದೆ, ಇನ್ನೂ ಶುದ್ಧೀಕರಣವಾಗಿಲ್ಲ: ಕೆ.ಎಸ್.ಈಶ್ವರಪ್ಪ]]></title>
            <link>https://kannada.asianetnews.com/karnataka-districts/ks-eshwarappa-on-bjp-cleanup-karnataka-politics-gvd/articleshow-qhzrnay</link>
            <guid isPermaLink="true">https://kannada.asianetnews.com/karnataka-districts/ks-eshwarappa-on-bjp-cleanup-karnataka-politics-gvd/articleshow-qhzrnay</guid>
            <pubDate>Fri, 24 Apr 2026 20:12:37 +0530</pubDate>
            <description><![CDATA[&lt;p&gt;ಬಿಜೆಪಿ ಶುದ್ಧೀಕರಣ ಆಗಬೇಕು ಎಂದು ಪಕ್ಷದಿಂದ ಹೊರಗೆ ಬಂದೆ. ಆದರೆ, ಇನ್ನೂ ಶುದ್ಧೀಕರಣವಾಗಿಲ್ಲ. ನಾನು ಯಾವ ಪಕ್ಷಕ್ಕೂ ಹೋಗಲ್ಲ. ಹೊಸ ಪಕ್ಷ ಕಟ್ಟಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g975x17kzyppr01r9h4rdkry,imgname-ks-eshwarappa.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.24): &lt;/strong&gt;ಬಿಜೆಪಿ ಶುದ್ಧೀಕರಣ ಆಗಬೇಕು ಎಂದು ಪಕ್ಷದಿಂದ ಹೊರಗೆ ಬಂದೆ. ಆದರೆ, ಇನ್ನೂ ಶುದ್ಧೀಕರಣವಾಗಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬೆಲೆ ಇದೆಯೇ ಹೊರತು ಹಿಂದುತ್ವಕ್ಕೆ ಬೆಲೆ ಇಲ್ಲದಂತಾಗಿದೆ. ಈ ಕಾರಣಕ್ಕಾಗಿಯೇ ನಾನು ಪಕ್ಷದಿಂದ ಹೊರ ಬಂದೆ. ಹಾಗಂತ ನಾನು ಯಾವ ಪಕ್ಷಕ್ಕೂ ಹೋಗಲ್ಲ. ಹೊಸ ಪಕ್ಷ ಕಟ್ಟಲ್ಲ.&lt;/p&gt;&lt;p&gt;ಶುದ್ಧೀಕರಣ ಬಳಿಕ ಬಿಜೆಪಿಗೆ ವಾಪಸಾಗುತ್ತೇನೆ. ಬಿಜೆಪಿ ಶುದ್ಧೀಕರಣವಾಗುವ ವಿಶ್ವಾಸ ನನಗಿದೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಸ್ಪಷ್ಟಪಡಿಸಿದರು. ಇನ್ನು ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಸಿಎಂ, ಡಿಸಿಎಂ ಅವರ ಎರಡು ಗುಂಪುಗಳಿವೆ. ಇದರಿಂದ ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಎರಡು ಗುಂಪುಗಳು ಪ್ರತ್ಯೇಕ ಸಭೆ ಮಾಡುತ್ತಿವೆ.&lt;/p&gt;&lt;p&gt;ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಪಕ್ಷದಲ್ಲಿ ಅತೃಪ್ತಿ ಹೊಗೆಯಾಡುತ್ತಿದ್ದು ಶೀಘ್ರವೇ ಸ್ಫೋಟಗೊಳ್ಳಲಿದೆ. ಪಂಚ ರಾಜ್ಯ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗಲಿದೆ ಎಂದರು. ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸಿಗರೇ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದ್ದಾರೆ. ಪಕ್ಷದ ಮುಸ್ಲಿಂ ನಾಯಕರನ್ನು ಕಿತ್ತು ಹಾಕಲಾಗಿದೆ.&lt;/p&gt;&lt;h2&gt;&lt;strong&gt;ಕಾಂಗ್ರೆಸ್&zwnj;ನ ಸ್ಥಿತಿ ಅಷ್ಟು ಉತ್ತಮವಾಗಿಲ್ಲ&lt;/strong&gt;&lt;/h2&gt;&lt;p&gt;ಉಚ್ಚಾಟಿತರನ್ನು ವಾಪಸ್ ಪಡೆಯಿರಿ ಎಂದು ಮುಸ್ಲಿಂ ಗುರುಗಳು ತಾಕೀತು ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆ ಗಮನಿಸಿದರೆ ಕಾಂಗ್ರೆಸ್&zwnj;ನ ಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಪಕ್ಷದಲ್ಲಿನ ಗುಂಪುಗಾರಿಕೆಯಿಂದ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದರು. ಪ್ರಧಾನಿ ವಿರುದ್ಧ ಹಗುರವಾಗಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು. ಮೋದಿ ಮಾತ್ರವಲ್ಲದೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.&lt;/p&gt;]]></content:encoded>
            <category>ballari</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ks-eshwarappa-on-bjp-cleanup-karnataka-politics-gvd/articleshow-qhzrnay"/>
        </item>
        <item>
            <title><![CDATA[ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರ ಕೊಲ್ಕತ್ತಾದ ರಾಮಕೃಷ್ಣ ಮಿಷನ್‌ಗೆ ಹಸ್ತಾಂತರ]]></title>
            <link>https://kannada.asianetnews.com/karnataka-districts/sri-ramakrishna-vivekananda-kendra-ballari-handed-over-to-ramakrishna-mission-kolkata-mrq/articleshow-sv2rkic</link>
            <guid isPermaLink="true">https://kannada.asianetnews.com/karnataka-districts/sri-ramakrishna-vivekananda-kendra-ballari-handed-over-to-ramakrishna-mission-kolkata-mrq/articleshow-sv2rkic</guid>
            <pubDate>Wed, 22 Apr 2026 08:27:29 +0530</pubDate>
            <description><![CDATA[&lt;p&gt;ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ಅಧಿಕೃತವಾಗಿ ರಾಮಕೃಷ್ಣ ಮಿಷನ್&zwnj;ಗೆ ಹಸ್ತಾಂತರಿಸಲಾಗಿದೆ. ಆಶ್ರಮದ ಮೂಲಕ ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲು ಯೋಜಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpshnbed29w34zsy1zhsa723,imgname-ballari-1776826363341.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ: &lt;/strong&gt;ಬಳ್ಳಾರಿಯ ಶ್ರೀ ರಾಮಕೃಷ್ಣ ಆಶ್ರಮ ಉತ್ತರ ಕರ್ನಾಟಕದ ಬೇಲೂರು ಮಠವಾಗಬೇಕು. ಪಶ್ಚಿಮಬಂಗಾಳದ ಬೇಲೂರು ಮಠದಲ್ಲಿ ಜರುಗುವ ಆಧ್ಯಾತ್ಮಿಕ ಹಾಗೂ ಸೇವಾ ಚಟುವಟಿಕೆ ಬಳ್ಳಾರಿಯ ಆಶ್ರಮದಲ್ಲೂ ನಿರಂತರವಾಗಿ ನಡೆಯುವಂತಾಗಬೇಕು ಎಂದು ಬೇಲೂರು ಮಠದ ಸಹ ಪ್ರಧಾನ ಕಾರ್ಯದರ್ಶಿ ಶ್ರೀ ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್ ಅವರು ತಿಳಿಸಿದರು.&lt;/p&gt;&lt;p&gt;ಇಲ್ಲಿನ ಗಾಂಧಿನಗರದ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ರಾಮಕೃಷ್ಣ ಮಿಷನ್&zwnj;ಗೆ ಹಸ್ತಾಂತರಿಸುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.&lt;/p&gt;&lt;h2&gt;&lt;strong&gt;ಆಶ್ರಮದ ಬೆಳವಣಿಗೆ&lt;/strong&gt;&lt;/h2&gt;&lt;p&gt;ಬಳ್ಳಾರಿಯ ಶ್ರೀ ರಾಮಕೃಷ್ಣ ಆಶ್ರಮ ಬೇಲೂರು ಮಠಕ್ಕೆ ಹಸ್ತಾಂತರಗೊಂಡಿರುವುದು ಅತ್ಯಂತ ಸಂತಸ ತಂದಿದೆ. ಅಲ್ಲಂ ಕರಿಬಸಪ್ಪ, ಎಚ್&zwnj;. ಸೀತಾರಾಮ ರೆಡ್ಡಿಯವರು ಸೇರಿದಂತೆ ಈ ಊರಿನ ಅನೇಕರು ಆಶ್ರಮದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಆ ಎಲ್ಲ ಮಹನೀಯರ ಸೇವಾ ಕೈಂಕರ್ಯ ಸದಾ ಸ್ಮರಣೀಯ. ರಾಮಕೃಷ್ಣ ಮಿಷನ್ ಆಧ್ಯಾತ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಸೇವಾ ಕೈಂಕರ್ಯದಲ್ಲೂ ತೊಡಗಿಸಿಕೊಳ್ಳುತ್ತದೆ. ಬಳ್ಳಾರಿಯ ಆಶ್ರಮದ ಮೂಲಕ ಸಹ ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ. ಈ ಭಾಗದ ಜನರ ಕಲ್ಯಾಣಕ್ಕಾಗಿ ಆಶ್ರಮ ಹೆಚ್ಚು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದು ಆಶಿಸಿದರು.&lt;/p&gt;&lt;p&gt;ಭಾರತದ ಕಲ್ಯಾಣದಲ್ಲಿ ಜಗತ್ತಿನ ಕಲ್ಯಾಣವಿದೆ. ಭಾರತ ಉಳಿದರೆ ಜಗತ್ತು ಉಳಿಯುತ್ತದೆ ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಿದ್ದರು. ಸಮಾಜದ ಕಲ್ಯಾಣವೇ ರಾಷ್ಟ್ರದ ಕಲ್ಯಾಣ. ಆತ್ಮದರ್ಶನ, ಆತ್ಮಜ್ಞಾನವೇ ನಮ್ಮೆಲ್ಲರ ಗುರಿಯಾಗಿದೆ. ಗೃಹಸ್ಥಾಶ್ರಮವಾಗಲೀ, ಸನ್ಯಾಸಾಶ್ರಮವಾಗಲೀ ನಾವೆಲ್ಲರೂ ಆತ್ಮಜ್ಞಾನಿಗಳಾಗಬೇಕು. ಯೋಗಿಗಳಾಗಬೇಕು ಎಂದರು.&lt;/p&gt;&lt;p&gt;ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರೂ ಅನಂತ ಶಕ್ತಿಯುಳ್ಳವರು. ತ್ಯಾಗ ಮತ್ತು ಸೇವೆಯ ಮೂಲಕ ನಮ್ಮೊಳಗಿನ ಅನಂತತೆಯನ್ನು ವೃದ್ಧಿಸಿಕೊಳ್ಳಬೇಕು. ನಾನು ಭಗವಂತನ ಮಗು. ಅತುಲ ಆತ್ಮವಿಶ್ವಾಸದ ಆಗರ. ಎಲ್ಲವನ್ನೂ ಧೈರ್ಯದಿಂದ ಎದುರಿಸಬಲ್ಲೆ. ನನ್ನ ದೇವರು ನನ್ನನ್ನು ಎಂದೂ ಕೈಬಿಡುವುದಿಲ್ಲ ಎಂಬ ನಂಬಿಕೆಯನ್ನು ಇಟ್ಟುಕೊಳ್ಳಬೇಕು ಎಂದು ಶ್ರೀ ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್ ತಿಳಿಸಿದರು.&lt;/p&gt;&lt;h3&gt;&lt;strong&gt;ಸ್ವಾಮಿ ಮಂಗಳನಾಥಾನಂದಜೀ ಮಹಾರಾಜ್ ಮಾತು&lt;/strong&gt;&lt;/h3&gt;&lt;p&gt;ರಾಮಕೃಷ್ಣ ಮಿಷನ್ ಬಳ್ಳಾರಿಯ ಶಾಖೆಯ ಮುಖ್ಯಸ್ಥರಾದ ಸ್ವಾಮಿ ಮಂಗಳನಾಥಾನಂದಜೀ ಮಹಾರಾಜ್ ಮಾತನಾಡಿ, ಈ ಹಿಂದಿನಿಂದಲೂ ಭಾರತದಲ್ಲಿ ಸಂಘಟನೆಯ ಕೊರತೆಯಿದೆ. ಸಂಘಟನೆ ನ್ಯೂನತೆ ಸರಿಪಡಿಸಲು ಸ್ವಾಮಿ ವಿವೇಕಾನಂದರು 1897ರಲ್ಲಿ ರಾಮಕೃಷ್ಣ ಮಿಷನ್ ಸ್ಥಾಪಿಸಿದರು. ಮಿಷನ್&zwnj; ಅಡಿಯಲ್ಲಿ ಪ್ರಪಂಚದಲ್ಲಿ 1600 ಸ್ವಾಮೀಜಿಗಳಿದ್ದು, ಶ್ರೀ ರಾಮಕೃಷ್ಣ ಪರಮಹಂಸರ ತತ್ವಗಳ ಪ್ರಚಾರ ಹಾಗೂ ನಿಸ್ವಾರ್ಥದಿಂದ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ರಾಮಕೃಷ್ಣ ಮಿಷನ್&zwnj;ಗೆ ಹಸ್ತಾಂತರಿಸಿದ ಬಳಿಕ ನನ್ನನ್ನು ಸೇವಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈಗಾಗಲೇ ಧಾರ್ಮಿಕ ಉಪನ್ಯಾಸ ಶುರುಗೊಳಿಸಲಾಗಿದ್ದು ಭಜನೆ, ಸಮ್ಮರ್ ಕ್ಲಾಸ್, ಸ್ಟಡಿ ಸರ್ಕಲ್ ಮತ್ತಿತರ ಚಟುವಟಿಕೆಗಳನ್ನು ಶುರು ಮಾಡಲಿದ್ದೇವೆ ಎಂದು ತಿಳಿಸಿದರು. ಬೆಂಗಳೂರು ಶಿವನಹಳ್ಳಿ ಆಶ್ರಮದ ಮಹಾವಾಕ್ಯಾನಂದ ಮಹಾರಾಜ್ ಉಪಸ್ಥಿತರಿದ್ದರು.&lt;/p&gt;&lt;p&gt;ಸಮಾರಂಭದಲ್ಲಿ ಹಾಜರಿದ್ದ ಮಾಜಿ ಸಂಸದ ಕೆ.ಸಿ. ಕೊಂಡಯ್ಯ ಅವರು ಆಧ್ಯಾತ್ಮಿಕ ಹಾಗೂ ಸೇವಾ ವಿಚಾರದಲ್ಲಿ ಬಳ್ಳಾರಿಯ ಎಲ್ಲ ಪಕ್ಷದವರು ಒಂದಾಗಿ ಕೆಲಸ ಮಾಡುತ್ತೇವೆ. ರಾಮಕೃಷ್ಣ ಮಿಷನ್&zwnj;ಗೆ ಬೇಕಾದ ಅಗತ್ಯ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದರು. ಶಾಸಕ ನಾರಾ ಭರತ್ ರೆಡ್ಡಿ ಅವರು ₹10 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು. ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಅವರು ಬದಲಾಗುತ್ತಿರುವ ಯುವಕರ ಆದ್ಯತೆ ಹಾಗೂ ದುಶ್ಚಟಗಳಿಂದ ತಪ್ಪಿಸಲು ಬಳ್ಳಾರಿಯ ರಾಮಕೃಷ್ಣ ಮಿಷನ್&zwnj;ನ ಪಾತ್ರ ಕುರಿತು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲು ಖೈದಿಗೆ ಫಸ್ಟ್ ಕ್ಲಾಸ್, ಶೇ.81 ಫಲಿತಾಂಶ&lt;/strong&gt;&lt;/p&gt;&lt;p&gt;ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆ ಮಾದರಿಯಲ್ಲಿ ಬಳ್ಳಾರಿಯಲ್ಲೂ ಶಾಲೆ ಆರಂಭಿಸುವಂತಾಗಲಿ, ಬೇಕಾದ ನೆರವು ನೀಡಲಾಗುವುದು ಎಂದು ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಮನವಿ ಮಾಡಿದರು.&lt;/p&gt;&lt;p&gt;ಮೇಯರ್ ಪಿ. ಗಾದೆಪ್ಪ ಮಾತನಾಡಿ, ರಾಮಕೃಷ್ಣ ಮಿಷನ್ ನ ಆಶ್ರಮ ಇರುವ ಈ ಹಿಂದೆಯೇ ನಾಮಕರಣಗೊಂಡಿರುವ ರಸ್ತೆಗೆ ಶ್ರೀರಾಮಕೃಷ್ಣ ವಿವೇಕಾನಂದ ರಸ್ತೆಗೆ ನಾಮಫಲಕ ಅಳವಡಿಸುವುದಾಗಿ ಭರವಸೆ ನೀಡಿದರು. ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರದ ಅಧ್ಯಕ್ಷ ಶ್ರೀಧರ ಬೋನಗೇರಿ, ಕಾರ್ಯದರ್ಶಿ ಜಗನ್ನಾಥ, ಪೃಥ್ವಿರಾಜ್ ಭೂಪಾಲ್ ಸೇರಿದಂತೆ ಆಶ್ರಮದ ಭಕ್ತರು ಉಪಸ್ಥಿತರಿದ್ದರು. ಚಿಲ್ಕರಾಯಿ ಎರಿಸ್ವಾಮಿ, ರಾಜಶೇಖರ್ ಹಾಗೂ ಗಡಗಿ ರಾಕೇಶ್ ಅವರು ಕಾರ್ಯಕ್ರಮ ನಿರ್ವಹಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುಂಗಾಭದ್ರ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ: ಹಲವು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ&lt;/strong&gt;&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sri-ramakrishna-vivekananda-kendra-ballari-handed-over-to-ramakrishna-mission-kolkata-mrq/articleshow-sv2rkic"/>
        </item>
        <item>
            <title><![CDATA[ಬಳ್ಳಾರಿ: ಮೂರು ತಿಂಗಳಲ್ಲಿ 4300 ಮಂದಿಗೆ ಬೀದಿ ನಾಯಿ ಕಡಿತ! ಚಿಕಿತ್ಸೆ ಫಲಿಸದೇ ಇಬ್ಬರ ಸಾವು]]></title>
            <link>https://kannada.asianetnews.com/karnataka-districts/ballari-4300-people-bitten-by-stray-dogs-in-three-months-two-dies-mrq/articleshow-v7q37zl</link>
            <guid isPermaLink="true">https://kannada.asianetnews.com/karnataka-districts/ballari-4300-people-bitten-by-stray-dogs-in-three-months-two-dies-mrq/articleshow-v7q37zl</guid>
            <pubDate>Sat, 28 Mar 2026 07:18:20 +0530</pubDate>
            <description><![CDATA[ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಕಳೆದ ಮೂರು ತಿಂಗಳಲ್ಲಿ 4000ಕ್ಕೂ ಹೆಚ್ಚು ಜನರಿಗೆ ಕಚ್ಚಿ, ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತವು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರೂ, ಶೆಲ್ಟರ್&zwnj; ನಿರ್ಮಾಣಕ್ಕೆ ಜಾಗದ ಕೊರತೆಯಿಂದಾಗಿ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kfq4xz43hr458ff2eaazk9gd,imgname-telangana-stray-dogs-killed-900-deaths-in-one-month-jagtial-panchayat-case-08-1769229712515.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;&lt;strong&gt;ಬಳ್ಳಾರಿ: &lt;/strong&gt;ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಮೂರೇ ತಿಂಗಳಲ್ಲಿ 4000ಕ್ಕೂ ಅಧಿಕ ಜನರಿಗೆ ನಾಯಿಗಳು ಕಚ್ಚಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಐದು ತಾಲೂಕುಗಳ ಪೈಕಿ ಬಳ್ಳಾರಿ ನಗರದಲ್ಲಿ ಅತಿ ಹೆಚ್ಚು ನಾಯಿ ಕಡಿತ ಘಟನೆಗಳು ನಡೆದಿವೆ.&lt;/p&gt;&lt;p&gt;ಬಳ್ಳಾರಿ ನಗರದಲ್ಲಿ 17 ಸಾವಿರ ಸೇರಿ ತಾಲೂಕಿನಲ್ಲಿ 30,383 ನಾಯಿಗಳಿವೆ. ಒಂದು ವರ್ಷದ ಹಿಂದಿನ ಗಣತಿ ಪ್ರಕಾರ ಜಿಲ್ಲೆಯಲ್ಲಿ 52,375 ನಾಯಿಗಳಿವೆ. ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ 4,330 ಜನರಿಗೆ ನಾಯಿ ಕಚ್ಚಿದ್ದು ಚಿಕಿತ್ಸೆ ಪಡೆದಿದ್ದಾರೆ.&lt;/p&gt;&lt;p&gt;ಬಳ್ಳಾರಿಯಲ್ಲಿ ನಿತ್ಯ 250 ರಿಂದ 300 ಶ್ವಾನಗಳನ್ನು ಹಿಡಿದು ಸಂತಾನ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಕಳೆದ ವರ್ಷದ ಜೂನ್&zwnj;ನಿಂದ ಈವರೆಗೆ ನಗರದ 3800 ಶ್ವಾನಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೊದಲ ಆದ್ಯತೆಯಾಗಿ ಆಸ್ಪತ್ರೆಗಳು ಹಾಗೂ ಶಾಲಾ-ಕಾಲೇಜುಗಳ ಬಳಿಯ ಶ್ವಾನಗಳನ್ನು ಮಾತ್ರ ಹಿಡಿಯಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ತಿಳಿಸಿದ್ದಾರೆ.&lt;/p&gt;&lt;p&gt;ನಾಯಿಗಳ ಕಡಿತಕ್ಕೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಆರ್&zwnj;ವಿ ಇಂಜೆಕ್ಷನ್ ಲಭ್ಯವಿದೆ. ಎಲ್ಲೂ ಕೊರತೆಯಿಲ್ಲ. ಒಂದು ವೇಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯವಿಲ್ಲದಿದ್ದರೆ ಕೂಡಲೇ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವೈ.ರಮೇಶ್ ಬಾಬು ಕನ್ನಡಪ್ರಭಕ್ಕೆ ತಿಳಿಸಿದರು.&lt;/p&gt;&lt;h2&gt;&lt;strong&gt;ನಾಯಿ ಶೆಲ್ಟರ್&zwnj;ಗೆ ಜಾಗದ ಅಭಾವ&lt;/strong&gt;&lt;/h2&gt;&lt;p&gt;ಶ್ವಾನಗಳನ್ನು ಹಿಡಿದ ಬಳಿಕ ಅವುಗಳನ್ನು ಶೆಲ್ಟರ್&zwnj;ನಲ್ಲಿ ಹಾಕಬೇಕು. ಸದ್ಯಕ್ಕೆ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿ ಪ್ರದೇಶದಲ್ಲಿ ಶೆಲ್ಟರ್ ನಿರ್ಮಿಸಲಾಗಿದೆ. ಆದರೆ, ಈ ಶೆಲ್ಟರ್&zwnj;ನಲ್ಲಿ 250ರಿಂದ 300 ನಾಯಿಗಳನ್ನು ಮಾತ್ರ ಇರಿಸಬಹುದು. ಸುಮಾರು 17 ಸಾವಿರ ನಾಯಿಗಳನ್ನು ಶೆಲ್ಟರ್&zwnj;ನಲ್ಲಿರಿಸಲು ದೊಡ್ಡ ಜಾಗವೇ ಬೇಕು. ಹೊರವಲಯದ ಆಲ್ದಳ್ಳಿ ಬಳಿ 10 ಎಕರೆ ಸರ್ಕಾರಿ ಜಮೀನಿನಲ್ಲಿ ದೊಡ್ಡ ಶೆಲ್ಟರ್ ನಿರ್ಮಿಸಲು ಯೋಚಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಜಾಗ ಪಾಲಿಕೆಯ ಸುಪರ್ದಿಗೆ ಬಂದಿಲ್ಲ. ಹೀಗಾಗಿ ಶೆಲ್ಟರ್ ನಿರ್ಮಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುಂಗಾಭದ್ರ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ: ಹಲವು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ&lt;/strong&gt;&lt;/p&gt;&lt;p&gt;ನಾಯಿಗಳಿಗೆ ಶೆಲ್ಟರ್ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ₹4 ಕೋಟಿ ಕೊಡುವಂತೆ ಕೇಳಲಾಗಿತ್ತು. ಮೊದಲ ಹಂತದಲ್ಲಿ ₹1.05 ಕೋಟಿ ಬಿಡುಗಡೆ ಮಾಡಿದ್ದಾರೆ. ಆದರೆ, ಶೆಲ್ಟರ್ ನಿರ್ಮಿಸಲು ಜಾಗವಿಲ್ಲ. ಆಲ್ದಳಿ ಬಳಿಯ 10 ಎಕರೆ ಜಾಗ ಪಾಲಿಕೆ ಸುಪರ್ದಿಗೆ ಪಡೆಯಲು ಕ್ರಮ ವಹಿಸಲಾಗುತ್ತಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್ ಹೇಳುತ್ತಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಉತ್ತರ ಕರ್ನಾಟಕಕ್ಕೆ ಸಂತಸದ ಸುದ್ದಿ, ಬಳ್ಳಾರಿ&ndash;ಹೊಸಪೇಟೆ ನಡುವೆ 3ನೇ ಮತ್ತು 4ನೇ ರೈಲ್ವೆ ಮಾರ್ಗಕ್ಕೆ ಕೇಂದ್ರ ಅನುಮೋದನೆ#railway #ballari #hosapetehttps://t.co/A8HIfRwkFK&lt;/p&gt;&lt;p&gt;&mdash; Asianet Suvarna News (@AsianetNewsSN) February 16, 2026&lt;/p&gt;&lt;p&gt;&amp;nbsp;&lt;/p&gt;&lt;h3&gt;&lt;strong&gt;ಹೊಸಪೇಟೆಯಲ್ಲಿ 733 ಜನರಿಗೆ ನಾಯಿ ಕಡಿತ&lt;/strong&gt;&lt;/h3&gt;&lt;p&gt;ವಿಜಯನಗರ ಜಿಲ್ಲೆಯಲ್ಲಿ ಕಳೆದ ಜನವರಿ, ಫೆಬ್ರವರಿಯಲ್ಲಿ 1751 ಜನರಿಗೆ ನಾಯಿಗಳು ಕಚ್ಚಿದ್ದು, ಈ ಪೈಕಿ ಹೊಸಪೇಟೆ ನಗರದಲ್ಲಿಯೇ 733 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳಿವೆ. ಕೂಡ್ಲಿಗಿ, ಕೊಟ್ಟೂರಿನಲ್ಲಿ ಅತಿ ಕಡಿಮೆ ನಾಯಿ ದಾಳಿ ಪ್ರಕರಣಗಳಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಅಖಂಡ ಬಳ್ಳಾರಿ ಜಿಲ್ಲೆಗೆ ₹2372 ಕೋಟಿ ವೆಚ್ಚದಲ್ಲಿ ಎರಡು ಹೊಸ ರೈಲು ಮಾರ್ಗ, ಅಭಿವೃದ್ಧಿಯ ಹೊಸ ಶಕೆ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ರೈಲು, ಒಟ್ಟು 9 ಟ್ರಿಪ್&zwnj;, ಕರ್ನಾಟಕದ ಈ ಎಲ್ಲಾ ಜಿಲ್ಲೆಗಳಲ್ಲಿ ಹಾದು ಹೋಗಲಿದೆ!https://t.co/Z1fNjACHNI&lt;/p&gt;&lt;p&gt;&mdash; Asianet Suvarna News (@AsianetNewsSN) March 25, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ballari-4300-people-bitten-by-stray-dogs-in-three-months-two-dies-mrq/articleshow-v7q37zl"/>
        </item>
        <item>
            <title><![CDATA[ಬಳ್ಳಾರಿ: ಮದುವೆಯಾದ ತಿಂಗಳಲ್ಲೇ ಮರೆಯಾದ ನವಜೋಡಿ: ಜಾತ್ರೆಗೆಂದು ಹೊರಟವರಿಗೆ ಕಾದಿತ್ತು ಕರಾಳ ವಿಧಿ!]]></title>
            <link>https://kannada.asianetnews.com/karnataka-districts/ballari-couple-died-in-road-accident-doddaballapur-newlyweds-tragedy-san/articleshow-x4q9egx</link>
            <guid isPermaLink="true">https://kannada.asianetnews.com/karnataka-districts/ballari-couple-died-in-road-accident-doddaballapur-newlyweds-tragedy-san/articleshow-x4q9egx</guid>
            <pubDate>Fri, 03 Apr 2026 13:29:34 +0530</pubDate>
            <description><![CDATA[ಕಳೆದ ತಿಂಗಳಷ್ಟೇ ಮದುವೆಯಾಗಿದ್ದ ಬೆಂಗಳೂರಿನ ಪವನ್ ಮತ್ತು ಬಳ್ಳಾರಿಯ ರಕ್ಷಿತಾ, ಊರ ಜಾತ್ರೆಗೆಂದು ಕಾರಿನಲ್ಲಿ ಬರುವಾಗ ದೊಡ್ಡಬಳ್ಳಾಪುರ ಬಳಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತ ಘಟನೆಯು ಎರಡೂ ಕುಟುಂಬಗಳಲ್ಲಿ ಮತ್ತು ಗ್ರಾಮದಲ್ಲಿ తీవ్ర ಶೋಕವನ್ನುಂಟುಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn95dnxk772x9zdxt6svm6yw,imgname-ballari-death--2--1775202916275.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಏ.3): &lt;/strong&gt;ಬದುಕಿನ ಹೊಸ ಕನಸುಗಳನ್ನು ಹೊತ್ತು ಮದುವೆಯಾದ ತಿಂಗಳಲ್ಲೇ ನವಜೋಡಿಯೊಂದು ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿರುವ ಘಟನೆ ಸಂಭವಿಸಿದೆ. ಈ ಸಾವು ಕುಟುಂಬಸ್ಥರ ಪಾಲಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಮೊದಲ ಜಾತ್ರೆಗಾಗಿ ತಮ್ಮ ಊರಿಗೆ ಬರಲು ದಂಪತಿ ನಿರ್ಧರಿಸಿದ್ದರು. ಅದರಂತೆ ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾಗ, ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.&lt;/p&gt;&lt;p&gt;ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಪವನ್ ಮತ್ತು ರಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರೂ ಯುವಕ-ಯುವತಿಯರಾಗಿದ್ದು, ಬದುಕಿ ಬಾಳಬೇಕಾದ ಜೋಡಿ ಹೀಗೆ ಅರ್ಧದಲ್ಲೇ ಇಹಲೋಕ ತ್ಯಜಿಸಿದ್ದು ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.&lt;/p&gt;&lt;h2&gt;&lt;strong&gt;ಮುಗಿಲು ಮುಟ್ಟಿದ ಆಕ್ರಂದನ&lt;/strong&gt;&lt;/h2&gt;&lt;p&gt;ಜಾತ್ರೆಗೆಂದು ಸಂಭ್ರಮದಿಂದ ಊರಿಗೆ ಮರಳಿ ಬರಬೇಕಾಗಿದ್ದ ನವಜೋಡಿ, ಮರಳಿ ಬಾರದ ಲೋಕಕ್ಕೆ ಪಯಣಿಸಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ. ಜೋಳದ ರಾಶಿ ಗ್ರಾಮದಲ್ಲಿ ಮೃತದೇಹಗಳು ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ. ಸಂತೋಷದ ದಿನಗಳಲ್ಲಿ ಬರಬೇಕಾಗಿದ್ದ ದಂಪತಿಗಳು ಶವವಾಗಿ ಮನೆಗೆ ಬಂದ ದೃಶ್ಯ ನೆರೆದಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ballari</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/ballari-couple-died-in-road-accident-doddaballapur-newlyweds-tragedy-san/articleshow-x4q9egx"/>
        </item>
        <item>
            <title><![CDATA[ತುಂಗಾಭದ್ರ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ: ಹಲವು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ]]></title>
            <link>https://kannada.asianetnews.com/state/huge-drop-in-water-level-in-tungabhadra-reservoir-many-villages-feared-water-scarcity/articleshow-xar8xsq</link>
            <guid isPermaLink="true">https://kannada.asianetnews.com/state/huge-drop-in-water-level-in-tungabhadra-reservoir-many-villages-feared-water-scarcity/articleshow-xar8xsq</guid>
            <pubDate>Tue, 24 Mar 2026 12:54:39 +0530</pubDate>
            <description><![CDATA[ಬೇಸಿಗೆಯ ತಾಪಕ್ಕೆ ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಕುಸಿದಿದ್ದು, ಕೇವಲ 20 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಇದರಿಂದ ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಶುರುವಾಗಿದ್ದು, ನೀರನ್ನು ಕುಡಿಯಲು ಮಾತ್ರ ಮೀಸಲಿಡಬೇಕೆಂಬ ಒತ್ತಾಯ ಹೆಚ್ಚಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01cj9w571hnxn5nr65tmpz7b8n,imgname-Ballari-Tunga-Bhadra-Dam.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ತುಂಗಾಭದ್ರ ಜಲಾಶಯಕ್ಕೂ ತಟ್ಟಿದ ಬಿಸಿ; ತಾಪ&lt;/strong&gt;&lt;/h2&gt;&lt;p&gt;ವಿಜಯನಗರ/ಬಳ್ಳಾರಿ: ಸೂರ್ಯನ ತಾಪ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ಸೆಖೆ ತಡೆದುಕೊಳ್ಳಲಾಗದೇ ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇತ್ತ ಬಿರು ಬೇಸಿಗೆಯ ಬಿಸಿಲ ತಾಪ ತುಂಗಾಭದ್ರ ಜಲಾಶಯಕ್ಕೂ ತಟ್ಟಿದ್ದು, ಜಲಾಶಯದ ನೀರಿನ&zwnj; ಮಟ್ಟ ಕೂಡ ಕಡಿಮೆಯಾಗ್ತಿದೆ.&lt;/p&gt;&lt;p&gt;ವಿಜಯನಗರ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಜೀವ ಜಲಕ್ಕಾಗಿ ಈಗಾಗಲೇ ಹಾಹಾಕಾರ ಶುರುವಾಗಿದೆ. 105. 788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ತುಂಗಾಭದ್ರಾ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು ಮಾತ್ರ ಇದೆ. ಹೀಗಾಗಿ ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೀರನ್ನು ಕೇವಲ ಜನರಿಗೆ ಕುಡಿಯುವ ನೀರಿಗಾಗಿ ಮೀಸಲಿಡುವಂತೆ ಒತ್ತಾಯ ಕೇಳಿ ಬಂದಿದೆ.&lt;/p&gt;&lt;h3&gt;&lt;strong&gt;ಬೇಸಿಗೆಯ ದಿನಗಳನ್ನು ಎದುರಿಸಲು ಜಿಲ್ಲಾಡಳಿತ ಪೂರ್ವ ಸಿದ್ಧತೆ&lt;/strong&gt;&lt;/h3&gt;&lt;p&gt;ಇರುವ 20 ಟಿಎಂಸಿ ನೀರಿನಲ್ಲಿ ಸುತ್ತಮುತ್ತಲಿನ ಕಾರ್ಖಾನೆಗಳು ನಡೆಯಬೇಕಿದೆ. ಇದರ ಜೊತೆಗೆ ಸುತ್ತಮುತ್ತಲ ಕೃಷಿ ಚಟುವಟಿಕೆಗಳಿಗೂ ನೀರಿನ ಅಗತ್ಯವಿದೆ. ಇದರೊಂದಿಗೆ ಕುಡಿಯುವ ನೀರಿಗೂ ಜಲಾಶಯದ ನೀರು ಬಳಕೆ ಮಾಡಬೇಕಿದೆ. ಹೀಗಾಗಿ ಮುಂದಿರುವ ಬೇಸಿಗೆಯ ದಿನಗಳನ್ನು ಎದುರಿಸಲು ಜಿಲ್ಲಾಡಳಿತ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಲಾಶಯದ ನೀರನ್ನು ಮಿತವಾಗಿ ಬಳಸೋದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಕ್ಕಳಿಗೆ ದಾರಿ ತೋರಬೇಕಾದ ಶಿಕ್ಷಕಿಯೇ ದಾರಿ ತಪ್ಪಿದಳು: ಪ್ರಿಯಕರನೊಂದಿಗೆ ಸೇರಿ ಗಂಡನ ಮುಗಿಸಿದ ಸರ್ಕಾರಿ ಶಾಲೆ ಟೀಚರ್&lt;/strong&gt;&lt;/p&gt;&lt;p&gt;ಈ ಹಿನ್ನೆಲೆ ನೀರಾವರಿ ಇಲಾಖೆ ಮತ್ತು ಕಾರ್ಖಾನೆಗಳ ಮಾಲಿಕರ ಜೊತೆ ಜಿಲ್ಲಾಡಳಿತ ಸಭೆ ನಡೆಸುವುದಕ್ಕೆ ತೀರ್ಮಾನ ಮಾಡಿದೆ. ಈಗಾಗಲೇ ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿವ ನೀರಿಗೆ ಹಾಹಾಕಾರ ಪ್ರಾರಂಭವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ನೂರಾರು ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಹೀಗಾಗಿ ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಸಮರ್ಪಕವಾಗಿ ಕುಡಿಯುವ ನೀರಿಗೆ ಬಳಕೆ ಮಾಡಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹುಬ್ಬಳ್ಳಿ: ಯುವಕರ ಪಾಲಿಗೆ ಮೃತ್ಯಪಾಶವಾಯ್ತು ಕೇಬಲ್ ವೈರ್: ಇಬ್ಬರು ಬೈಕ್ ಸವಾರರು ಸಾವು&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>ballari</category>
            <dc:creator>Anusha Kb</dc:creator>
            <atom:link href="https://kannada.asianetnews.com/state/huge-drop-in-water-level-in-tungabhadra-reservoir-many-villages-feared-water-scarcity/articleshow-xar8xsq"/>
        </item>
    </channel>
</rss>
