<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 22 Aug 2026 07:16:15 +0530</lastBuildDate>
        <atom:link href="https://kannada.asianetnews.com/rss/ballari" rel="self" type="application/rss+xml"/>
        <item>
            <title><![CDATA[Ballari: ಕಠಿಣ ಶಾಪದ ಎಚ್ಚರಿಕೆ ನೀಡಿರುವ ಶಾಸನ ಪತ್ತೆ; ಮಲ್ಲಿಕಾರ್ಜುನ ದೇಗುಲ ಮಾಹಿತಿ]]></title>
            <link>https://kannada.asianetnews.com/karnataka-districts/ballari-sandur-inscription-warning-of-severe-curse-discovered-mallikarjuna-temple-information-dodda-antapura-mrq/articleshow-12cgsx9</link>
            <guid isPermaLink="true">https://kannada.asianetnews.com/karnataka-districts/ballari-sandur-inscription-warning-of-severe-curse-discovered-mallikarjuna-temple-information-dodda-antapura-mrq/articleshow-12cgsx9</guid>
            <pubDate>Tue, 28 Jul 2026 08:44:10 +0530</pubDate>
            <description><![CDATA[ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮದಲ್ಲಿ ವಿಜಯನಗರೋತ್ತರ ಕಾಲದ ದಾನ ಶಾಸನವೊಂದು ಪತ್ತೆಯಾಗಿದೆ. ಮಲ್ಲಿಕಾರ್ಜುನ ದೇವಾಲಯಕ್ಕೆ ಭೂಮಿ ದಾನ ಮಾಡಿದ ವಿವರಗಳನ್ನು ಹೊಂದಿರುವ ಈ ಶಾಸನವು, ದಾನವನ್ನು ನಿಲ್ಲಿಸಿದವರಿಗೆ ಕಠಿಣ ಶಾಪದ ಎಚ್ಚರಿಕೆಯನ್ನೂ ನೀಡುತ್ತದೆ. ಈ ಸಂಶೋಧನೆಯು ಗ್ರಾಮದ ಮರೆತುಹೋದ ಇತಿಹಾಸದ ಮೇಲೆ ಬೆಳಕು ಚೆಲ್ಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kykb01fvqwsgzz80k5w5matk,imgname-sandur-1785207981563.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಸಂಡೂರು ತಾಲೂಕಿನ ದೊಡ್ಡ ಅಂತಾಪುರ ಗ್ರಾಮದ ಚಂದ್ರಶೇಖರ ಅವರ ಹೊಲದ ಬದುವಿನ ಉತ್ತರಾಭಿಮುಖವಾಗಿ ಇರುವ ಹುಟ್ಟು ಬಂಡೆಯ ಮೇಲೆ ಕೆತ್ತಲಾಗಿರುವ ದಳವಾಯಿ-ಗೌಡರ ದಾನ ಶಾಸನವನ್ನು ವಿಜಯನಗರ ತಿರುಗಾಟ ಸಂಶೋಧನ ತಂಡವು ಪತ್ತೆ ಹಚ್ಚಿದೆ.&lt;/p&gt;&lt;p&gt;ಸಂಶೋಧನಾ ತಂಡದ ಪ್ರೊ.ಎಚ್. ತಿಪ್ಪೇಸ್ವಾಮಿ, ಡಾ.ಗೋವಿಂದ, ಡಾ.ಕೃಷ್ಣೇಗೌಡ, ಸಂಶೋಧಕರಾದ ಎಚ್.ರವಿ, ಅಶೋಕ ನಾಯಕ್ ದಿದ್ದಿಗಿ, ಇಸ್ಮಾಯಿಲ್ ಸಿದ್ದೀಕಿ ಹಾಗೂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ಮಾರುತಿ ಜಿ.ವಿ. ಹಾಗೂ ತಾಯಪ್ಪ ಅವರು ಸ್ಥಳೀಯರಾದ ತಾಯಪ್ಪ, ರಾಗಿ ಶಿವರಾಮಪ್ಪ, ಬಂಡ್ರಿ ಪಾಪಯ್ಯ, ಬಾಬಣ್ಣ ಅವರ ಸಹಕಾರದಿಂದ ಪತ್ತೆ ಹಚ್ಚಿದ್ದಾರೆ.&lt;/p&gt;&lt;p&gt;ದಾನ ಶಾಸನವು ವಿಜಯನಗರೋತ್ತರ ಕಾಲದ ಗ್ರಾಮೀಣ ಆಡಳಿತ, ಧಾರ್ಮಿಕ ವ್ಯವಸ್ಥೆ, ದಾನ ಸಂಸ್ಕೃತಿಯ ಕುರಿತು ಮಹತ್ವದ ಮಾಹಿತಿ ನೀಡುವ ಅಪರೂಪದ ಶಾಸನವಾಗಿದೆ. ಇದು ಕೇವಲ ಒಂದು ಶಾಸನದ ಪತ್ತೆಯಲ್ಲ. ಒಂದು ಗ್ರಾಮದ ಮರೆತುಹೋದ ಇತಿಹಾಸವನ್ನು ಮರುಜೀವಗೊಳಿಸಿದ ಮಹತ್ವದ ಸಂಶೋಧನೆಯಾಗಿದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟರು.&lt;/p&gt;&lt;h2&gt;&lt;strong&gt;ಶಾಸನದ ಶಿಲ್ಪಕಲೆ ಹಾಗೂ ಭಕ್ತಿ ಕಲೆಯ ಸಂಗಮ&lt;/strong&gt;&lt;/h2&gt;&lt;p&gt;ಈ ಶಾಸನವು ಸುಮಾರು ೪ ಅಡಿ ಎತ್ತರ ಹಾಗೂ ಮೂರು ಅಡಿ ಅಗಲವಾಗಿರುವ ಗ್ರಾನೈಟ್ ಬಂಡೆಯ ಮೇಲೆ ಕೆತ್ತಲಾಗಿದೆ. ಶಾಸನದ ಎಡ ಭಾಗದಲ್ಲಿ ಚಂದ್ರ, ಬಲಬದಿಗೆ ಸೂರ್ಯನ ಚಿಹ್ನೆಗಳನ್ನು ಕೆತ್ತಲಾಗಿದೆ. ಮಧ್ಯದಲ್ಲಿ ಶಿವಲಿಂಗದ ಎದುರು ಭಕ್ತಿಭಾವದಿಂದ ಕುಳಿತಿರುವ ನಂದಿಯ ಸುಂದರ ಶಿಲ್ಪವನ್ನು ಕೆತ್ತಲಾಗಿದೆ. ಅದರ ಕೆಳಭಾಗದಲ್ಲಿ ದೊಡ್ಡ ಗಾತ್ರದ ಶಿವಲಿಂಗವನ್ನು ಕೆತ್ತಿರುವುದು ಈ ಶಾಸನದ ಧಾರ್ಮಿಕ ಮಹತ್ವವನ್ನು ಎತ್ತಿ ಹಿಡಿಯುತ್ತದೆ. ಶಾಸನವನ್ನು ಬರೆಸಿದವರು ಶೈವ ಧರ್ಮದವರೆಂದು ತಿಳಿದು ಬರುತ್ತದೆ.&lt;/p&gt;&lt;h3&gt;&lt;strong&gt;ನಿತ್ಯಪೂಜೆ ಮತ್ತು ಅಮೃತ ಪಡಿ ನೈವೇದ್ಯ&lt;/strong&gt;&lt;/h3&gt;&lt;p&gt;ಶಾಸನವನ್ನು ಕನ್ನಡ ಭಾಷೆಯ ಲಿಪಿಯಲ್ಲಿ ಬರೆಯಲ್ಪಟ್ಟಿದ್ದು, ಒಟ್ಟು ಎಂಟು ಸಾಲುಗಳನ್ನು ಒಳಗೊಂಡಿವೆ. ಶುಭಮಸ್ತು ಎಂಬ ಮಂಗಳ ಪದದಿಂದ ಆರಂಭವಾಗುವ ಈ ಶಾಸನದಲ್ಲಿ ಅಂತಾಪುರದ ದಳವಾಯಿ ತಿರುಮಲಯ್ಯ ಮತ್ತು ಗೌಡ ಹನುಮಿನಾಯಕರು ಮಲ್ಲಿಕಾರ್ಜುನ ದೇವಾಲಯಕ್ಕೆ ಭೂಮಿಯನ್ನು ದಾನವಾಗಿ ನೀಡಿದ ವಿಷಯವನ್ನು ದಾಖಲಿಸಲಾಗಿದೆ. ಈ ಭೂಮಿಯಿಂದ ಬರುವ ಆದಾಯದಿಂದ ದೇವರಿಗೆ ನಿತ್ಯಪೂಜೆ ಮತ್ತು ಅಮೃತ ಪಡಿ ನೈವೇದ್ಯ ನಿರಂತರವಾಗಿ ನಡೆಯಬೇಕು ಎಂಬ ಸ್ಪಷ್ಟ ಉಲ್ಲೇಖವಿದೆ ಎಂದು ಹಂಪಿ ಕನ್ನಡ ವಿವಿ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಶ್ರೇಣಿ ಪ್ರಾಧ್ಯಾಪಕ ಡಾ. ಗೋವೀಂದ ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತೆಕ್ಕಲಕೋಟೆಯಲ್ಲಿ ಅಪರೂಪದ ಹುಲಿ ಬೇಟೆಯ ವೀರಗಲ್ಲು ಪತ್ತೆ; ಪರಾಕ್ರಮದ ವಿಶೇಷ ಕೆತ್ತನೆ&lt;/strong&gt;&lt;/p&gt;&lt;p&gt;ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಚ್. ತಿಪ್ಪೇಸ್ವಾಮಿ, ಈ ಶಾಸನದ ಅತ್ಯಂತ ಕುತೂಹಲಕಾರಿ ಅಂಶವೆಂದರೆ, ಅದರ ಕೊನೆಯಲ್ಲಿ ಕಂಡುಬರುವ ಶಾಪಾಶಯ. ದಾನವು ನಿರಂತರವಾಗಿ ಮುಂದುವರೆಯಬೇಕು. ಯಾರಾದರೂ ಈ ದಾನವನ್ನು ನಿಲ್ಲಿಸಿದರೆ ಅಥವಾ ಶಾಸನವನ್ನು ನಾಶಪಡಿಸಿದರೆ, ಅವರು ವಾರಣಾಸಿಯಲ್ಲಿ ತಮ್ಮ ತಾಯಿಯನ್ನು ಕೊಂದ ಪಾಪಕ್ಕೆ ಗುರಿಯಾಗುತ್ತಾರೆ ಎಂಬ ಕಠಿಣ ಎಚ್ಚರಿಕೆ ದಾಖಲಿಸಲಾಗಿದೆ ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗ್ರಾಮವನ್ನು ದೇವಸ್ಥಾನಕ್ಕೆ ದಾನ ನೀಡಿದ ಮಾಹಿತಿ ವಿಜಯನಗರ ಕಾಲದ ಶಾಸನ ಕಂಪ್ಲಿಯಲ್ಲಿ ಪತ್ತೆ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಜಮೀನಿಗೆ ತೆರಳಲು ಸ್ವಂತ ಹಣದಲ್ಲಿ 3.5 ಕಿ.ಮೀ. ಉದ್ದದ ರಸ್ತೆ ನಿರ್ಮಿಸಿಕೊಂಡ ರೈತರುhttps://t.co/21DL2nvX6z#Ballari #Farmers pic.twitter.com/fIX4cwR9Lp&lt;/p&gt;&lt;p&gt;&mdash; Asianet Suvarna News (@AsianetNewsSN) June 22, 2026&lt;/p&gt;&lt;p&gt;&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ballari-sandur-inscription-warning-of-severe-curse-discovered-mallikarjuna-temple-information-dodda-antapura-mrq/articleshow-12cgsx9"/>
        </item>
        <item>
            <title><![CDATA[Brahmani Steels: 18 ವರ್ಷ ಬಳಿಕ ಜನಾರ್ದನ ರೆಡ್ಡಿಯ14000 ಎಕ್ರೆ ಆಂಧ್ರ ಸರ್ಕಾರ ವಶಕ್ಕೆ!]]></title>
            <link>https://kannada.asianetnews.com/karnataka-districts/14k-acres-of-land-allotted-to-brahmani-steels-owned-by-janardhan-reddy-taken-back-by-ap-govt-rav/articleshow-1vblhx7</link>
            <guid isPermaLink="true">https://kannada.asianetnews.com/karnataka-districts/14k-acres-of-land-allotted-to-brahmani-steels-owned-by-janardhan-reddy-taken-back-by-ap-govt-rav/articleshow-1vblhx7</guid>
            <pubDate>Sun, 12 Jul 2026 05:53:42 +0530</pubDate>
            <description><![CDATA[&lt;p&gt;Bramhani industries limited ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ(Gaali janardana reddy) ಒಡೆತನದ ಬ್ರಾಹ್ಮಣಿ ಸ್ಟೀಲ್ಸ್&zwnj;ಗೆ ಮಂಜೂರಾಗಿದ್ದ ಸುಮಾರು 14 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು 18 ವರ್ಷ ಸುದೀರ್ಘ ಕಾನೂನು ಪ್ರಕ್ರಿಯೆಯ ಬಳಿಕ ಆಂಧ್ರಪ್ರದೇಶ ಸರ್ಕಾರ ಮತ್ತೆ ತನ್ನ ವಶಕ್ಕೆ ಪಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx9tdddwfdf0wn9pj46wrhhr,imgname-----------------------2026-07-12t053720.943-1783814862268.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಜು.೧೨):&lt;/strong&gt; ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ(Gaali janardana reddy) ಒಡೆತನದ ಬ್ರಾಹ್ಮಣಿ ಸ್ಟೀಲ್ಸ್&zwnj;ಗೆ ಮಂಜೂರಾಗಿದ್ದ ಸುಮಾರು 14 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು 18 ವರ್ಷ ಸುದೀರ್ಘ ಕಾನೂನು ಪ್ರಕ್ರಿಯೆಯ ಬಳಿಕ ಆಂಧ್ರಪ್ರದೇಶ ಸರ್ಕಾರ ಮತ್ತೆ ತನ್ನ ವಶಕ್ಕೆ ಪಡೆದಿದೆ.&amp;nbsp;&lt;/p&gt;&lt;h2&gt;ಭೂಮಿ ಬಳಕೆಯಾಗದ್ದಕ್ಕೆ ಈ ಕ್ರಮ?&lt;/h2&gt;&lt;p&gt;ಉದ್ದೇಶಿತ ಕೈಗಾರಿಕಾ ಯೋಜನೆಗಳನ್ನು ಜಾರಿಗೊಳಿಸದೆ ಭೂಮಿಯನ್ನು ಬಳಕೆ ಆಗದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ವೈಎಸ್&zwnj;ಆರ್ ಕಡಪ ಜಿಲ್ಲೆಯ ಜಮ್ಮಲಮಡುಗು ಮಂಡಲದ ಅಂಬಾವರಂ ಗ್ರಾಮದಲ್ಲಿ 2007ರಲ್ಲಿ ಮೆಗಾ ಉಕ್ಕಿನ ಕಾರ್ಖಾನೆ ನಿರ್ಮಾಣಕ್ಕಾಗಿ 10,700 ಎಕರೆ, ವಿಮಾನ ನಿಲ್ದಾಣ, ಫ್ಲೈಯಿಂಗ್ ಅಕಾಡೆಮಿ ಯೋಜನೆಗಳಿಗಾಗಿ 3,115 ಎಕರೆ ಭೂಮಿಯನ್ನು ಬ್ರಾಹ್ಮಣಿ ಸ್ಟೀಲ್ಸ್&zwnj;ಗೆ ಮಂಜೂರು ಮಾಡಲಾಗಿತ್ತು. ಈ ಭೂಮಿಯ ಪ್ರಸ್ತುತ ಮೌಲ್ಯ ಸುಮಾರು ₹5,000 ಕೋಟಿ ಎಂದು ಅಂದಾಜಿಸಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;&lt;p&gt;ಸರ್ಕಾರವು ಈ ಹಿಂದೆ 2011 ರಲ್ಲಿ ಭೂಮಿಯನ್ನು ಮರಳಿ ಪಡೆಯಲು ಆದೇಶಗಳನ್ನು ಹೊರಡಿಸಿದ್ದರೂ, ನಿಜವಾದ ಸ್ವಾಧೀನ ನಡೆದಿರಲಿಲ್ಲ. ಕಾನೂನು ವಿವಾದಗಳನ್ನು ಪರಿಹರಿಸಲು ಮತ್ತು ಭೂಮಿಯನ್ನು ಯಶಸ್ವಿಯಾಗಿ ಸ್ವಾಧೀನಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಶ್ರೀಧರ್ ದೊಡ್ಡ ಹೆಜ್ಜೆ ಇಟ್ಟಿದ್ದಾರೆ.&lt;/p&gt;&lt;h2&gt;ವಿಮಾನ ನಿಲ್ದಾಣಕ್ಕೆ ಬಳಕೆಯಾಗದ ಭೂಮಿ&lt;/h2&gt;&lt;p&gt;2008 ರಲ್ಲಿ, ಆಗಿನ ಸರ್ಕಾರವು ವಾಣಿಜ್ಯ ವಿಮಾನ ನಿಲ್ದಾಣ, ಫ್ಲೈಯಿಂಗ್ ಅಕಾಡೆಮಿ ಮತ್ತು ವಾಯುಯಾನ ಸಂಬಂಧಿತ ಕೈಗಾರಿಕೆಗಳ ಸ್ಥಾಪನೆಗಾಗಿ ಬ್ರಹ್ಮಣಿ ಇಂಡಸ್ಟ್ರೀಸ್&zwnj;ಗೆ ಎಕರೆಗೆ ₹25,000 ದರದಲ್ಲಿ 3,115.64 ಎಕರೆ ಭೂಮಿಯನ್ನು ಮಂಜೂರು ಮಾಡಿತು. ಭೂಮಿಯನ್ನು ಹಸ್ತಾಂತರಿಸಲಾಗಿದ್ದರೂ, ಯಾವುದೇ ನಿರ್ಮಾಣ ಚಟುವಟಿಕೆಯನ್ನು ಪ್ರಾರಂಭಿಸಲಾಗಿಲ್ಲ. ಪ್ರಸ್ತುತ, ಇಡೀ ಪ್ರದೇಶವು ಬಳಕೆಯಾಗದೆ ಉಳಿದಿದೆ.&lt;/p&gt;&lt;p&gt;&lt;strong&gt;ಕಂಪನಿ ವಿವರಣೆ ನೀಡಲು ವಿಫಲ&lt;/strong&gt;&lt;/p&gt;&lt;p&gt;ಕಂಪನಿಯು ವಿವರಣೆ ನೀಡಲು ವಿಫಲವಾದ ಕಾರಣ, ಹಂಚಿಕೆಯನ್ನು ರದ್ದುಗೊಳಿಸಿ ನಿಯಮಾವಳಿಗಳ ಪ್ರಕಾರ ಭೂಮಿಯನ್ನು ಮರಳಿ ಪಡೆಯಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳು ಜಮ್ಮಲಮಡುಗು ತಹಶೀಲ್ದಾರ್ ಅವರಿಗೆ 48 ಗಂಟೆಗಳ ಒಳಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ನಿರ್ದೇಶಿಸಿದರು. ಅಂದಿನಿಂದ ಈ ಭೂಮಿಯನ್ನು ವೆಬ್&zwnj;ಲ್ಯಾಂಡ್, ಅಡಂಗಲ್ ಮತ್ತು 1-ಬಿ ದಾಖಲೆಗಳಲ್ಲಿ ಸರ್ಕಾರಿ ಆಸ್ತಿಯಾಗಿ ಮರು ದಾಖಲಿಸಲಾಗಿದೆ. ಈ ಭೂಮಿಯಲ್ಲಿ ಯಾವುದೇ ನೋಂದಣಿ ಅಥವಾ ಗುತ್ತಿಗೆ ಒಪ್ಪಂದಗಳನ್ನು ತಡೆಯಲು ಜಿಲ್ಲಾ ನೋಂದಣಾಧಿಕಾರಿಗೆ ಸೂಚನೆಗಳನ್ನು ನೀಡಲಾಗಿದೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/14k-acres-of-land-allotted-to-brahmani-steels-owned-by-janardhan-reddy-taken-back-by-ap-govt-rav/articleshow-1vblhx7"/>
        </item>
        <item>
            <title><![CDATA[ಹಂಪಿಯ ನಿಷೇಧಿತ, ಬಫರ್ ವಲಯದಲ್ಲಿ ಅಕ್ರಮ ಹೋಮ್‌ಸ್ಟೇ: 53ಕ್ಕೂ ಹೆಚ್ಚು ಅಧಿಕಾರಿಗಳಿಗೆ ಉಪಲೋಕಾಯುಕ್ತರ ಬಿಗ್ ಶಾಕ್!]]></title>
            <link>https://kannada.asianetnews.com/karnataka-districts/hampi-illegal-homestays-upa-lokayukta-notice-53-officials-san/articleshow-2av239u</link>
            <guid isPermaLink="true">https://kannada.asianetnews.com/karnataka-districts/hampi-illegal-homestays-upa-lokayukta-notice-53-officials-san/articleshow-2av239u</guid>
            <pubDate>Fri, 07 Aug 2026 10:07:42 +0530</pubDate>
            <description><![CDATA[&lt;p&gt;ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯ ಸಂರಕ್ಷಿತ ವಲಯಗಳಲ್ಲಿ ನಡೆಯುತ್ತಿರುವ ಅಕ್ರಮ ವಾಣಿಜ್ಯ ಚಟುವಟಿಕೆಗಳು ಮತ್ತು 250ಕ್ಕೂ ಹೆಚ್ಚು ಅನಧಿಕೃತ ಹೋಮ್&zwnj;ಸ್ಟೇಗಳ ವಿರುದ್ಧ ಉಪಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzd81zbyhbw7g9mw5d1022jn,imgname-hampi-1786077314430.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ (ಆ.7): &lt;/strong&gt;ಯುನೆಸ್ಕೋ (UNESCO) ಜಾಗತಿಕ ಪಾರಂಪರಿಕ ತಾಣವಾದ ವಿಜಯನಗರ ಜಿಲ್ಲೆಯ ಹಂಪಿಯ ಸಂರಕ್ಷಿತ, ಬಫರ್ ಹಾಗೂ ಪರಿಧಿ ವಲಯಗಳಲ್ಲಿ (Core, Buffer and Peripheral Zones) ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ವಾಣಿಜ್ಯ ಚಟುವಟಿಕೆಗಳು ಹಾಗೂ 250ಕ್ಕೂ ಹೆಚ್ಚು ಅನಧಿಕೃತ ಹೋಮ್&zwnj;ಸ್ಟೇಗಳ ವಿರುದ್ಧ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹಂಪಿ ವಿಶ್ವಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ (HWHAMA) ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ನಿಷೇಧಿತ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ನಡೆಸಲು ಅನುಮತಿ ನೀಡಿರುವುದನ್ನು ಉಪಲೋಕಾಯುಕ್ತರು ತಮ್ಮ ದೂರಿನಲ್ಲಿ ಗಂಭೀರವಾಗಿ ಪರಿಗಣಿಸಿದ್ದಾರೆ.&lt;/p&gt;&lt;p&gt;ನಿಯಮ ಉಲ್ಲಂಘನೆ ಹಾಗೂ ಅನಧಿಕೃತ ವಾಣಿಜ್ಯ ಚಟುವಟಿಕೆಗಳನ್ನು ತಡೆಯುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಉಪಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದು, ಲಿಖಿತ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ.&lt;/p&gt;&lt;h2&gt;&lt;strong&gt;53ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ತನಿಖೆಯ ಬಿಸಿ&lt;/strong&gt;&lt;/h2&gt;&lt;p&gt;ಈ ಕುರಿತು ಮಾತನಾಡಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಯಿಂದ ಹಿಡಿದು ಜೆಸ್ಕಾಂ (GESCOM), ಕಂದಾಯ, ಪ್ರವಾಸೋದ್ಯಮ ಮತ್ತು 'ಹವಾಮಾ' (HWHAMA) ಸೇರಿದಂತೆ ವಿವಿಧ ಇಲಾಖೆಗಳ 53ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ವಿರುದ್ಧ ಈ ದೂರು ಒಳಗೊಂಡಿದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;&quot;ಹಂಪಿಯ ಅತ್ಯಂತ ಸಂರಕ್ಷಿತ (Core) ವಲಯದಲ್ಲಿ ಯಾವುದೇ ಅನಧಿಕೃತ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಅತ್ಯಂತ ಸ್ಪಷ್ಟ ನಿರ್ದೇಶನ ನೀಡಿದೆ. ಆದರೂ, ನನ್ನ ಭೇಟಿಯ ಸಂದರ್ಭದಲ್ಲಿ ಇಂತಹ ಹಲವು ಅಕ್ರಮ ಕಟ್ಟಡಗಳು ಕಾರ್ಯಾಚರಿಸುತ್ತಿರುವುದು ಕಂಡುಬಂದಿದೆ,&quot; ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳಿಗೆ ನೀಡಲಾದ ಅನುಮತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹವಾಮಾ ವ್ಯಾಪ್ತಿಯಲ್ಲಿ ಬರೋಬ್ಬರಿ 500ಕ್ಕೂ ಹೆಚ್ಚು ಅಕ್ರಮ ಹೋಮ್&zwnj;ಸ್ಟೇಗಳು, ರೆಸಾರ್ಟ್&zwnj;ಗಳು, ಹೋಟೆಲ್&zwnj;ಗಳು, ಲಾಡ್ಜ್&zwnj;ಗಳು ಮತ್ತು ಅಂಗಡಿಗಳು ಕಾರ್ಯಾಚರಿಸುತ್ತಿರಬಹುದು ಎಂದು ಅವರು ಅಂದಾಜಿಸಿದ್ದಾರೆ.&lt;/p&gt;&lt;h2&gt;&lt;strong&gt;ಯುನೆಸ್ಕೋ ಮಾರ್ಗಸೂಚಿಗಳ ಉಲ್ಲಂಘನೆ&lt;/strong&gt;&lt;/h2&gt;&lt;p&gt;ಹಂಪಿಯ ಸಾಂಸ್ಕೃತಿಕ ಮತ್ತು ಪುರಾತತ್ತ್ವ ಪ್ರಾಮುಖ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಅದರ ಸಂರಕ್ಷಿತ ಮತ್ತು ಬಫರ್ ವಲಯಗಳಲ್ಲಿ ಅನಧಿಕೃತ ವಾಣಿಜ್ಯ ನಿರ್ಮಾಣಗಳು, ರೆಸಾರ್ಟ್&zwnj;ಗಳು ಮತ್ತು ಹೋಮ್&zwnj;ಸ್ಟೇಗಳನ್ನು ಯುನೆಸ್ಕೋ ಮಾರ್ಗಸೂಚಿಗಳ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಈ ರೀತಿಯ ಅಕ್ರಮಗಳನ್ನು ತಡೆಯಲು ವಿಫಲರಾಗಿದ್ದಷ್ಟೇ ಅಲ್ಲದೆ, ಕೆಲ ಪ್ರಕರಣಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅನುಮತಿಯನ್ನೂ ನೀಡಿದ್ದಾರೆ ಎಂದು ಉಪಲೋಕಾಯುಕ್ತರು ಚಾಟಿ ಬೀಸಿದ್ದಾರೆ.&lt;/p&gt;&lt;p&gt;ಹಂಪಿಯಲ್ಲಿ ನಡೆಯುತ್ತಿರುವ ಅಕ್ರಮ ವಾಣಿಜ್ಯ ಚಟುವಟಿಕೆಗಳು ಹಾಗೂ ಅನಧಿಕೃತ ಪ್ರವಾಸೋದ್ಯಮ ಸಂಸ್ಥೆಗಳ ಕುರಿತು ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಜುಲೈ 25 ರಂದು ಹಂಪಿಗೆ ಅಧಿಕೃತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ರಕ್ಷಿತ ಪ್ರದೇಶದಲ್ಲಿ ಅಣಬೆಯಂತೆ ಬೆಳೆದು ನಿಂತಿರುವ ಅನಧಿಕೃತ ಹೋಮ್&zwnj;ಸ್ಟೇಗಳ ಬಗ್ಗೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.&lt;/p&gt;&lt;p&gt;ಪರಿಶೀಲನೆಯ ವೇಳೆ, ಪಂಚಾಯತ್ ಅಥವಾ ಹವಾಮಾದಿಂದ ಕಡ್ಡಾಯ ಅನುಮೋದನೆ ಅಥವಾ ಪರವಾನಗಿ ಪಡೆಯದೆ ಕನಿಷ್ಠ 250 ಅಕ್ರಮ ಹೋಮ್&zwnj;ಸ್ಟೇಗಳು ಕಾರ್ಯಾಚರಿಸುತ್ತಿವೆ ಎಂದು ಅಧಿಕಾರಿಗಳು ಅವರ ಗಮನಕ್ಕೆ ತಂದಿದ್ದರು. ಇದರಿಂದ ಕೆರಳಿದ ಉಪಲೋಕಾಯುಕ್ತರು, ಶಾಸನಬದ್ಧ ಅನುಮತಿಗಳೇ ಇಲ್ಲದೆ ಇಷ್ಟೊಂದು ಬೃಹತ್ ಸಂಖ್ಯೆಯ ಉದ್ಯಮಗಳು ಕಾರ್ಯಾಚರಿಸಲು ಹೇಗೆ ಸಾಧ್ಯವಾಯಿತು ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.&lt;/p&gt;&lt;h2&gt;&lt;strong&gt;ಗ್ರಾಮ ಪಂಚಾಯಿತಿಗಳ ವಿರುದ್ಧ ಆಕ್ರೋಶ&lt;/strong&gt;&lt;/h2&gt;&lt;p&gt;ಈ ವಿಚಾರವಾಗಿ ಪ್ರತಿಕ್ರಿಯಿಸಿದ 'ಹವಾಮಾ'ದ ಮಾಜಿ ಹಿರಿಯ ಅಧಿಕಾರಿಯೊಬ್ಬರು, &quot;ಹೋಮ್&zwnj;ಸ್ಟೇ ಅಥವಾ ಇತರ ವಾಣಿಜ್ಯ ಮಳಿಗೆಗಳಿಗೆ ಅನುಮೋದನೆ ನೀಡುವ ಯಾವುದೇ ಅಧಿಕಾರ ನಮಗಿಲ್ಲ. ವಿಜಯನಗರ ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳ ಆದೇಶದಂತೆ ಹೋಮ್&zwnj;ಸ್ಟೇಗಳನ್ನು ಸ್ಥಾಪಿಸಲು ಅನುಮತಿ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿತ್ತು. ಈ ಅಕ್ರಮ ಹೋಮ್&zwnj;ಸ್ಟೇಗಳ ಹಾವಳಿ ವ್ಯಾಪಕವಾಗಿದ್ದು, ನಾವು ಈ ಹಿಂದೆ ಸಂಬಂಧಪಟ್ಟ ವ್ಯಕ್ತಿಗಳಿಗೆ ನೋಟಿಸ್&zwnj;ಗಳನ್ನು ನೀಡಿದ್ದೆವು,&quot; ಎಂದು ಸ್ಪಷ್ಟನೆ ನೀಡಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/hampi-illegal-homestays-upa-lokayukta-notice-53-officials-san/articleshow-2av239u"/>
        </item>
        <item>
            <title><![CDATA[Bidadi Township: ಬಿಡದಿ ರೈತ ಹೋರಾಟಕ್ಕೆ ಬಿಜೆಪಿ ಎಂಟ್ರಿ! ನಾಳೆ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ!]]></title>
            <link>https://kannada.asianetnews.com/politics/karnataka-bjp-joins-bidadi-farmers-protest-massive-protest-in-bengaluru-tomorrow-rav/articleshow-45bs2qc</link>
            <guid isPermaLink="true">https://kannada.asianetnews.com/politics/karnataka-bjp-joins-bidadi-farmers-protest-massive-protest-in-bengaluru-tomorrow-rav/articleshow-45bs2qc</guid>
            <pubDate>Thu, 16 Jul 2026 10:11:22 +0530</pubDate>
            <description><![CDATA[&lt;p&gt;ಬಿಡದಿ ಟೌನ್&zwnj;ಶಿಪ್&zwnj; ಕೈಬಿಡುವಂತೆ ಆಗ್ರಹಿಸಿ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್&zwnj;ನಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಮಾಜಿ ಸಂಸದರು ಸೇರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪಾದಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxmk5rn666nxe6m5qmfjsg6v,imgname-----------------------2026-07-16t100230.240-1784176370341.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಜು.16) &lt;/strong&gt;ಬಿಡದಿ ಟೌನ್&zwnj;ಶಿಪ್&zwnj; ಕೈಬಿಡುವಂತೆ ಆಗ್ರಹಿಸಿ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್&zwnj;ನಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಮಾಜಿ ಸಂಸದರು ಸೇರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪಾದಿಸಿದರು.&lt;/p&gt;&lt;p&gt;ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರು ಪೊರಕೆ ಹಿಡಿದು ಹೊಡೆಯುವ ಪರಿಸ್ಥಿತಿ ನಿರ್ಮಾಣವಾಗಲು ಸಿಎಂ ಡಿ.ಕೆ.ಶಿವಕುಮಾರ್ ಅವರ ರೈತ ವಿರೋಧಿ ಆಡಳಿತವೇ ಕಾರಣ. ರಾಜ್ಯದಲ್ಲಿ ಬಡವರ, ರೈತ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಡಿಕೆಶಿ ಅವರಿಗೆ ರಿಯಲ್&zwnj; ಎಸ್ಟೇಟ್&zwnj; ಆದ್ಯತೆಯಾಗಿದೆ ಹೊರತು ರೈತರಲ್ಲ. ರೈತರ ಜತೆ ಸಿಎಂ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು. ಬಿಡದಿ ಟೌನ್&zwnj;ಶಿಪ್&zwnj; ಬಗ್ಗೆ ಹೋರಾಟ ಮಾಡುತ್ತಿರುವ ರೈತರು ಹಾಗೂ ಸಂಘಟನೆಯ ಮೇಲೆ ದಾಖಲು ಮಾಡಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.&lt;/p&gt;&lt;p&gt;ಡಿಕೆಶಿ ಅವರು ಸಿಎಂ ಆಗಿ ಆಯ್ಕೆಯಾದ 24 ಗಂಟೆಗಳಲ್ಲಿ ಬಿಡದಿ ಟೌನ್&zwnj;ಶಿಪ್&zwnj; ಬಗ್ಗೆ ಆದೇಶ ಮಾಡಿದ್ದಾರೆ. ರೈತರು ಹಾಗೂ ಕೃಷಿ ಕಾರ್ಮಿಕರ ಬಗ್ಗೆ ಈ ಸರ್ಕಾರಕ್ಕೆ ಯಾವುದೇ ಕಾಳಜಿಯಿಲ್ಲ ಎಂಬುದಕ್ಕೆ ಇದುವೇ ಸಾಕ್ಷಿ. ಈ ಸರ್ಕಾರಕ್ಕೆ ದುಡಿವ ಜನರಿಗಿಂತ ತಮ್ಮ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದರು.&lt;/p&gt;&lt;p&gt;ಟೌನ್&zwnj;ಶಿಪ್&zwnj; ಕೈಬಿಡಬೇಕು ಎಂದು ಆಗ್ರಹಿಸಿ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್&zwnj;ನಲ್ಲಿ ಬಿಜೆಪಿ ಧರಣಿ ಮಾಡುತ್ತದೆ. ಬಿಡದಿ ಸೇರಿದಂತೆ ರೈತ ವಿರೋಧಿ ನಿಲುವಿನ ವಿರುದ್ಧ, ಅಧಿವೇಶನದಲ್ಲೂ ಬಿಜೆಪಿ ಜೆಡಿಎಸ್&zwnj;ನಿಂದ ಜಂಟಿಯಾಗಿ ಹೋರಾಟ ನಡೆಸಲಾಗುವುದು. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆಯೂ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಡಿ.ಕೆ.ಶಿವಕುಮಾರ್&zwnj; ಅವರು ನೀರಾವರಿ ಸಚಿವರಾಗಿದ್ದ ವೇಳೆ ತುಂಗಭದ್ರಾ ಜಲಾಶಯದ ಕ್ರಸ್ಟ್&zwnj; ಗೇಟ್&zwnj; ದುರಸ್ತಿ ಮಾಡಲು 24 ತಿಂಗಳು ಬೇಕಾಯಿತು. ಇದರಿಂದಾಗಿ ರೈತರು ಎರಡನೇ ಬೆಳೆಯಿಂದ ವಂಚಿತರಾಗಿದ್ದರು. ಹೀಗೆ ಸಾಕಷ್ಟು ರೈತ ವಿರೋಧಿ ನೀತಿಗಳಿವೆ. ರಾಜ್ಯ ಸರ್ಕಾರ ಜನವಿರೋಧಿಯಾಗಿ ವರ್ತಿಸಿದರೆ ಕೇಳುವುದಿಲ್ಲ. ರೈತರ ಹಿತಾಸಕ್ತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ. ಹೋರಾಟದ ಮೂಲಕ ಸೂಕ್ತ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.&lt;/p&gt;&lt;h2&gt;ಕೃಷಿ ಸಚಿವರು ಯಾರು?&lt;/h2&gt;&lt;p&gt;ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಹೀಗಾಗಿ, ಸಿಎಂ ಡಿಕೆಶಿ ಅವರು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳಿಸಬೇಕು ಎಂದು ಉಲ್ಲೇಖ ಮಾಡಿದ್ದಾರೆ. ಕರ್ನಾಟಕದಲ್ಲಿ ಏನಾದರೂ ರಾಷ್ಟ್ರಪತಿ ಆಡಳಿತ ಹೇರಿದ್ದಾರಾ ಎನ್ನುವ ಅನುಮಾನ ಮೂಡಿಸಿದೆ. ಇಂಥ ಪರಿಸ್ಥಿತಿಯಲ್ಲಿ ಸಿಎಂ ಹಾಗೂ ಸಚಿವರು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕೃಷಿ ಸಚಿವರಿಲ್ಲದಿರುವುದು ಇದಕ್ಕಿಂತ ದುರ್ದೈವ ಇನ್ನೊಂದಿಲ್ಲ. ರೈತರ ಸಂಕಷ್ಟಕ್ಕೆ ಸ್ಪಂದಿಸುವ ವ್ಯವಧಾನ ಕಾಂಗ್ರೆಸ್&zwnj; ಸರಕಾರಕ್ಕಿಲ್ಲ ಎಂದರು.&lt;/p&gt;&lt;h3&gt;ಕೈಕಮಾಂಡ್ ಹೊಟ್ಟೆ ತುಂಬಿಸಲು ಬಿಡದಿ ಟೌನ್&zwnj;ಶಿಪ್: ವಿಜಯೇಂದ್ರ&lt;/h3&gt;&lt;p&gt;ಹೊಸಪೇಟೆ: ಕಾಂಗ್ರೆಸ್ ಹೈಕಮಾಂಡ್&zwnj;ನ ಹೊಟ್ಟೆ ತುಂಬಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡದಿ ಬಳಿ ರೈತರ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ಟೌನ್&zwnj;ಶಿಪ್ ಯೋಜನೆಗೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೊಶ ವ್ಯಕ್ತಪಡಿಸಿದರು.&lt;/p&gt;&lt;p&gt;ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ (ಎಸ್&zwnj;ಐಆರ್) ಕುರಿತ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರೈತರಿಗೆ ಮರಣಶಾಸನವಾಗಲಿರುವ ಬಿಡದಿ ಟೌನ್ ಶಿಪ್ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ. ಆ ಭಾಗದ ರೈತರ ಧ್ವನಿಯಾಗಲು ಬಿಜೆಪಿ ಹೋರಾಟ ನಡೆಸಲಿದೆ. ಅಲ್ಲದೇ, ಮುಂಗಾರು ವಿಧಾನ ಮಂಡಲ ಅಧಿವೇಶನದ ಬಳಿಕ ರಾಜ್ಯ ಪ್ರವಾಸ ನಡೆಸುವುದಾಗಿ ಅವರು ತಿಳಿಸಿದರು.&lt;/p&gt;&lt;p&gt;ರಾಜ್ಯದಲ್ಲಿ ಮಳೆ ಇಲ್ಲದೇ ತೀವ್ರ ಬರಗಾಲ ಎದುರಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಖರೀದಿ ಹಾಗೂ ಬಿತ್ತನೆ ಕಾರ್ಯಕ್ಕೆ ಸಾಕಷ್ಟು ಸಾಲ ಶೂಲ ಮಾಡಿ ಬಿತ್ತನೆ ಮಾಡಿ ಅನೇಕ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರದಿಂದ ಯಾವುದೇ ರೀತಿಯಲ್ಲಿ ಬರ ಪರಿಹಾರ ಕಾರ್ಯಗಳನ್ನು ನಿರ್ವಹಿಸುತ್ತಿಲ್ಲ ಎಂದು ಹೇಳಿದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-bjp-joins-bidadi-farmers-protest-massive-protest-in-bengaluru-tomorrow-rav/articleshow-45bs2qc"/>
        </item>
        <item>
            <title><![CDATA[ನಿನ್ನೆ ಆರತಕ್ಷತೆ, ರಾತ್ರಿ ಮದುಮಗನ ಭೀಕರ ಹತ್ಯೆ; ಬೆಚ್ಚಿಬಿದ್ದ ಬಳ್ಳಾರಿ.. ಆಗಿದ್ದೇನು?]]></title>
            <link>https://kannada.asianetnews.com/ballari/yesterday-was-the-reception-at-night-the-groom-was-brutally-murdered-ballari-shocked-gkn/articleshow-4cf7g7e</link>
            <guid isPermaLink="true">https://kannada.asianetnews.com/ballari/yesterday-was-the-reception-at-night-the-groom-was-brutally-murdered-ballari-shocked-gkn/articleshow-4cf7g7e</guid>
            <pubDate>Fri, 17 Jul 2026 11:21:01 +0530</pubDate>
            <description><![CDATA[ಬಳ್ಳಾರಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ನಭೀ ರಸೂಲ್ ಎಂಬ ಯುವಕನನ್ನು ಅವರ ಆರತಕ್ಷತೆಯ ಮರುದಿನವೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಯುವತಿಯ ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಇದೊಂದು ಮರ್ಯಾದಾ ಹತ್ಯೆ ಎಂದು ಬಲವಾಗಿ ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxqa0x0cx5mg1h1v0wf9pt6d,imgname-ballari-lovers-marriage---2--1784267437068.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ: &lt;/strong&gt;ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ಶಂಕೆಯೊಂದು ದಟ್ಟವಾಗಿ ಹರಡಿದ್ದು, ಪ್ರೀತಿಸಿ ಮದುವೆಯಾಗಿದ್ದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ಕೃತ್ಯ ಘಟನೆ ನಡೆದಿದ್ದು ಇಡೀ ಗ್ರಾಮವೇ ಆಘಾತಕ್ಕೆ ಒಳಗಾಗಿದೆ.&lt;/p&gt;&lt;h2&gt;&lt;strong&gt;ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ&lt;/strong&gt;&lt;/h2&gt;&lt;p&gt;ಹತ್ಯೆಯಾದ ಯುವಕನನ್ನು ನಭೀ ರಸೂಲ್ ಎಂದು ಗುರುತಿಸಲಾಗಿದೆ. ನಭೀ ರಸೂಲ್ ಯುವತಿಯೊಬ್ಬರನ್ನು ಪ್ರೀತಿಸಿ ಇತ್ತೀಚೆಗಷ್ಟೇ ಮದುವೆಯಾಗಿದ್ದರು. ನಿನ್ನೆಯಷ್ಟೇ ಯುವಕನ ಮನೆಯಲ್ಲಿ ಅದ್ಧೂರಿಯಾಗಿ ಆರತಕ್ಷತೆ (Reception) ಕಾರ್ಯಕ್ರಮ ನಡೆದಿತ್ತು. ಸಂಬಂಧಿಕರು, ಸ್ನೇಹಿತರ ನಗು-ನಲಿವಿನಿಂದ ತುಂಬಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.&lt;/p&gt;&lt;h3&gt;&lt;strong&gt;ಏನಿದು ಘಟನೆ?&lt;/strong&gt;&lt;/h3&gt;&lt;p&gt;ಆರತಕ್ಷತೆ ಮುಗಿದ ನಂತರ, ರಾತ್ರಿ ಸುಮಾರು 11 ಗಂಟೆಯ ಹೊತ್ತಿಗೆ ನಭೀ ರಸೂಲ್ ಮನೆಯಿಂದ ಹೊರಗೆ ಹೋಗಿದ್ದರು. ಆದರೆ, ರಾತ್ರಿ ಕಳೆದರೂ ಅವರು ಮನೆಗೆ ವಾಪಸ್ ಬಂದಿರಲಿಲ್ಲ. ಇಂದು ಬೆಳಿಗ್ಗೆ ಅವರು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;p&gt;ನಭೀ ರಸೂಲ್ ಅವರ ಪ್ರೇಮ ವಿವಾಹಕ್ಕೆ ಯುವತಿಯ ಪೋಷಕರಿಂದ ತೀವ್ರ ವಿರೋಧವಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಯುವತಿಯ ಕಡೆಯವರು ಈ ಕೃತ್ಯ ಎಸಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಪ್ರೀತಿಯನ್ನು ನಂಬಿ ಬಂದಿದ್ದ ನವವಿವಾಹಿತೆ, ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.&lt;/p&gt;&lt;h3&gt;&lt;strong&gt;ಸ್ಥಳಕ್ಕೆ ಎಸ್ ಪಿ ಭೇಟಿ&lt;/strong&gt;&lt;/h3&gt;&lt;p&gt;ಘಟನೆ ನಡೆದ ಸ್ಥಳಕ್ಕೆ ಬಳ್ಳಾರಿ ಎಸ್ ಪಿ ಸುಮನ್ ಡಿ. ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಗ್ರಾಮದಲ್ಲಿ ದುಃಖ ಮುಡುಗಟ್ಟಿದ್ದು, ಜನರು ಭೀತಿ ಮತ್ತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/ballari/yesterday-was-the-reception-at-night-the-groom-was-brutally-murdered-ballari-shocked-gkn/articleshow-4cf7g7e"/>
        </item>
        <item>
            <title><![CDATA[ಬಳ್ಳಾರಿಯ ಹೊಲದಲ್ಲಿ 14ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಜೈನ ದಾನ ಶಾಸನ ಪತ್ತೆ! ಹಂಪಿಯ ನಂಟು ಉಲ್ಲೇಖ]]></title>
            <link>https://kannada.asianetnews.com/karnataka-districts/rare-14th-century-vijayanagara-inscription-discovered-in-ballari-farmer-s-field-gdp/articleshow-5ce59nv</link>
            <guid isPermaLink="true">https://kannada.asianetnews.com/karnataka-districts/rare-14th-century-vijayanagara-inscription-discovered-in-ballari-farmer-s-field-gdp/articleshow-5ce59nv</guid>
            <pubDate>Fri, 17 Jul 2026 14:19:35 +0530</pubDate>
            <description><![CDATA[ಬಳ್ಳಾರಿಯ ಡಿ.ಅಂತಾಪುರ ಗ್ರಾಮದ ರೈತರೊಬ್ಬರ ಹೊಲದಲ್ಲಿ, ವಿಜಯನಗರ ತಿರುಗಾಟ ಸಂಶೋಧನಾ ತಂಡವು ವಿಜಯನಗರ ಸಾಮ್ರಾಜ್ಯದ ದೊರೆ ಎರಡನೇ ಹರಿಹರನ ಕಾಲದ (ಕ್ರಿ.ಶ. 1395) ಅಪರೂಪದ ಜೈನ ದಾನ ಶಾಸನವನ್ನು ಪತ್ತೆಹಚ್ಚಿದೆ. 17ನೇ ತೀರ್ಥಂಕರ ಕುಂಥುನಾಥರ ಹೆಸರಿನಲ್ಲಿ ಭೂಮಿಯನ್ನು ದಾನ ಮಾಡಿದ ಈ ಶಾಸನವು, ಹಂಪಿಯ ಜೈನ ಪರಂಪರೆಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxqm0jf9p7z5ntmyb7b581mw,imgname-vijayanagara-inscription-discovered-in-ballari-1784277912041.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ವಿಜಯನಗರ ತಿರುಗಾಟ ಸಂಶೋಧನಾ ತಂಡದ ಸದಸ್ಯರು ಭಾನುವಾರ ತಾಲೂಕಿನ ಡಿ.ಅಂತಾಪುರ (ದೊಡ್ಡ ಅಂತಾಪುರ) ಗ್ರಾಮದ ಗ್ಯಾನಪ್ಪ ಎಂಬ ರೈತನ ಹೊಲದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದ ಅಪ್ರಕಟಿತ, ಅಪರೂಪದ ಜೈನ ದಾನ ಶಾಸನವೊಂದನ್ನು ಪತ್ತೆ ಹಚ್ಚಿದ್ದಾರೆ.&lt;/p&gt;&lt;p&gt;ಈ ಸಂಶೋಧನೆಯು ವಿಜಯನಗರ ಅರಸರ ಕಾಲದ ಜೈನ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲಲಿದೆ. ವಿಜಯನಗರ ತಿರುಗಾಟ ಸಂಶೋಧನಾ ತಂಡದ ಪ್ರೊ. ಎಚ್.ತಿಪ್ಪೇಸ್ವಾಮಿ, ಡಾ. ಗೋವಿಂದ, ಡಾ. ಕೃಷ್ಣೇಗೌಡ, ಸಂಶೋಧಕರಾದ ಎಚ್.ರವಿ, ಇಸ್ಮಾಯಿಲ್ ಸಿದ್ದಿಕಿ, ಅಶೋಕ್ ನಾಯಕ್ ದಿದ್ದಿಗಿ, ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಇತಿಹಾಸ ವಿಭಾಗದ ವಿದ್ಯಾರ್ಥಿಗಳಾದ ಮಾರುತಿ, ಶ್ರೀಕಾಂತ, ಸ್ಥಳೀಯರಾದ ರಾಗಿ ಶಿವರಾಮಪ್ಪ, ಪಾಪಯ್ಯ, ತಾಯಪ್ಪ ಅವರ ಸಹಕಾರದೊಂದಿಗೆ ಈ ಶಾಸನವನ್ನು ಪತ್ತೆ ಹಚ್ಚಿದ್ದಾರೆ.&lt;/p&gt;&lt;h2&gt;ದಾನ ಶಾಸನ:&lt;/h2&gt;&lt;p&gt;ವಿಜಯನಗರ ಸಾಮ್ರಾಜ್ಯದ ದೊರೆ ಎರಡನೇ ಹರಿಹರನ ಆಳ್ವಿಕೆಯ ಕಾಲದ ದಾನ ಶಾಸನ ಇದಾಗಿದೆ. ಈ ಶಾಸನವು ಕ್ರಿ.ಶ. ೧೩೯೫ (ಶಕ ೧೩೧೭, ಕ್ರೋಧ ಸಂವತ್ಸರ)ಕ್ಕೆ ಸೇರಿದ್ದಾಗಿದೆ. ಶಾಸನದ ಪ್ರಕಾರ ವಿಜಯನಗರದ ಚಿಕ್ಕೋಡೆಯರಂಗಡಿ ಬಸದಿಯಲ್ಲಿದ್ದ ೧೭ನೇ ಜೈನ ತೀರ್ಥಂಕರರಾದ ಕುಂಥುನಾಥರ ಹೆಸರಿನಲ್ಲಿ ಆವಿನಮಡುವಿನ ಅಂತಾಪುರದಲ್ಲಿನ ಹನ್ನೆರಡು ಕೊಳಗ ಬೀಜ ಬಿತ್ತಬಹುದಾದಷ್ಟು ಭೂಮಿಯನ್ನು ತೆರಿಗೆ ವಿನಾಯಿತಿಯೊಂದಿಗೆ ಜೈನ ಬಸದಿಗೆ ದಾನವಾಗಿ ನೀಡಲಾಗಿದೆ.&lt;/p&gt;&lt;p&gt;ಶಾಸನದ ಎಡ ಭಾಗದಲ್ಲಿ ಸೂರ್ಯ, ಬಲ ಭಾಗದಲ್ಲಿ ಚಂದ್ರ, ಮಧ್ಯದಲ್ಲಿ ಮುಕ್ಕೊಡೆಯ ಕೆಳಗೆ ಪದ್ಮಾಸನದಲ್ಲಿ ಆಸೀನರಾಗಿರುವ ಜೀನಮೂರ್ತಿಯ ಶಿಲ್ಪವಿದೆ. ಸುಮಾರು ಐದು ಅಡಿ ಎತ್ತರ ಹಾಗೂ ಒಂದೂವರೆ ಅಡಿ ಅಗಲವಿರುವ ಈ ಶಾಸನದಲ್ಲಿ ಒಟ್ಟು ೧೩ ಸಾಲುಗಳಿದ್ದು, ಕನ್ನಡ ಭಾಷೆ ಮತ್ತು ಕನ್ನಡ ಲಿಪಿಯಲ್ಲಿ ಕೆತ್ತಲಾಗಿದೆ.&lt;/p&gt;&lt;h2&gt;ಹಂಪಿಯ ಜೈನ ಪರಂಪರೆಗೆ ನಂಟು:&lt;/h2&gt;&lt;p&gt;ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಶ್ರೇಣಿ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದ, ಶಾಸನದಲ್ಲಿ ಉಲ್ಲೇಖಿಸಿರುವ ಕುಂಥುನಾಥರು ೧೭ನೇ ತೀರ್ಥಂಕರರಾಗಿದ್ದು, ಹಂಪಿಯಲ್ಲಿರುವ ದ್ರಾವಿಡ ಶೈಲಿಯ ಗಾಣಿಗಿತ್ತಿ ಜಿನಾಲಯಕ್ಕೂ ಇವರ ಹೆಸರಿನ ನಂಟಿದೆ. ವಿಜಯನಗರದ ದಂಡನಾಯಕ ಇರುಗಪ್ಪನು ಆ ಜಿನಾಲಯವನ್ನು ನಿರ್ಮಿಸಿ, ಅಭಯಾರಣ್ಯವನ್ನು ಕುಂಥುನಾಥರಿಗೆ ದಾನವಾಗಿ ನೀಡಿದ್ದಾನೆ ಎಂಬುದನ್ನು ಅಲ್ಲಿಯ ಶಾಸನಗಳು ದೃಢಪಡಿಸುತ್ತಿವೆ ಎಂದು ತಿಳಿಸಿದರು.&lt;/p&gt;&lt;h2&gt;ಕುಂಥುನಾಥ ತೀರ್ಥಂಕರರ ಹೆಸರಿನ ಇನ್ನೆರಡು ಶಾಸನ ಪತ್ತೆ:&lt;/h2&gt;&lt;p&gt;ವಿಜಯನಗರ ತಿರುಗಾಟ ಸಂಶೋಧನಾ ತಂಡವು ಇದೇ ಸ್ಥಳದಲ್ಲಿ ಕುಂಥುನಾಥ ತೀರ್ಥಂಕರರ ಹೆಸರಿನ ಇನ್ನೂ ಎರಡು ಶಾಸನಗಳನ್ನು ಪತ್ತೆ ಹಚ್ಚಿದೆ. ದೃಶ್ಯಕಲಾ ವಿಭಾಗದ ಡಾ.ಕೃಷ್ಣೇಗೌಡ ಅವರ ಪ್ರಕಾರ ಇಂತಹ ಅಪರೂಪದ ಶಾಸನಗಳನ್ನು ಪುರಾತತ್ವ ಇಲಾಖೆ ವೈಜ್ಞಾನಿಕವಾಗಿ ಸಂರಕ್ಷಿಸಿ, ಮಳೆ, ಗಾಳಿ ಮತ್ತು ಬಿಸಿಲಿನಿಂದ ರಕ್ಷಿಸಿ, ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.&lt;/p&gt;&lt;h2&gt;ಮತ್ತಷ್ಟು ಸಂಶೋಧನೆಗೆ ಅವಕಾಶ:&lt;/h2&gt;&lt;p&gt;ಪ್ರಸ್ತುತ ಗ್ರಾಮದಲ್ಲಿ ಯಾವುದೇ ಜೈನ ಬಸದಿ ಕಾಣಿಸದಿದ್ದರೂ ಇಲ್ಲಿನ ಮಲ್ಲಿಕಾರ್ಜುನ ದೇವಾಲಯದಲ್ಲಿರುವ ಪ್ರಕಟಿತ ಶಾಸನದಲ್ಲಿ ಅನಂತಾಪುರ ಎಂದು ಉಲ್ಲೇಖವಾಗಿರುವ ಗ್ರಾಮವನ್ನು ಹೊಸದಾಗಿ ಪತ್ತೆ ಹಚ್ಚಲಾಗಿರುವ ಶಾಸನದಲ್ಲಿ ಅಂತಾಪುರ ಎಂದು ದಾಖಲಿಸಿರುವುದು ಗಮನಾರ್ಹವಾಗಿದೆ. ಈ ವ್ಯತ್ಯಾಸ ಹಾಗೂ ಹೊಸ ಶಾಸನಗಳ ಅಧ್ಯಯನದಿಂದ ಗ್ರಾಮದ ಇತಿಹಾಸದ ಕುರಿತು ಇನ್ನಷ್ಟು ಮಹತ್ವದ ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-14th-century-vijayanagara-inscription-discovered-in-ballari-farmer-s-field-gdp/articleshow-5ce59nv"/>
        </item>
        <item>
            <title><![CDATA[Carbon Dating ಪ್ರಕ್ರಿಯೆಯಲ್ಲಿ ಗೊತ್ತಾಯ್ತು ಸಂಡೂರು ಗುಹೆ ಇತಿಹಾಸ, ಭಾರತದಲ್ಲಿಯೇ ಅತ್ಯಂತ ಹಳೇ ಮಾನವ ವಾಸಸ್ಥಾನ ಎಂದ ತಜ್ಞರು!]]></title>
            <link>https://kannada.asianetnews.com/ballari/sandur-caves-karnataka-carbon-dating-oldest-human-habitat-san/articleshow-8pxxkdi</link>
            <guid isPermaLink="true">https://kannada.asianetnews.com/ballari/sandur-caves-karnataka-carbon-dating-oldest-human-habitat-san/articleshow-8pxxkdi</guid>
            <pubDate>Fri, 17 Jul 2026 16:56:07 +0530</pubDate>
            <description><![CDATA[&lt;p&gt;ಬಳ್ಳಾರಿಯ ಸಂಡೂರು ಅರಣ್ಯದಲ್ಲಿ 10,000 ವರ್ಷಗಳಷ್ಟು ಹಳೆಯದಾದ ಶಿಲಾಯುಗದ ಗುಹೆ ವಾಸಸ್ಥಾನ ಪತ್ತೆಯಾಗಿದೆ. ಕಾರ್ಬನ್ ಡೇಟಿಂಗ್ ಮೂಲಕ ಇದು ಸಮುದ್ರ ಮಟ್ಟದಿಂದ 850 ಮೀಟರ್ ಎತ್ತರದಲ್ಲಿರುವ ಭಾರತದ ಅತ್ಯಂತ ಹಳೆಯ ಗುಹಾ ವಾಸಸ್ಥಾನವೆಂದು ದೃಢಪಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxqx3vdpqjnf49zdyv2sf7z4,imgname-ballari-sandur-cave-1784287456694.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಂಡೂರು (ಬಳ್ಳಾರಿ):&lt;/strong&gt; ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ಅರಣ್ಯ ಪ್ರದೇಶದಲ್ಲಿರುವ ಗುಹೆಯೊಂದು ದೇಶದಲ್ಲೇ ಸಮುದ್ರ ಮಟ್ಟದಿಂದ 850 ಮೀಟರ್ ಎತ್ತರದ ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಪತ್ತೆಯಾಗಿರುವ ಅತ್ಯಂತ ಹಳೆಯ ಗುhe ವಾಸಸ್ಥಾನ (Oldest Cave Habitat) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾರ್ಬನ್ ಡೇಟಿಂಗ್ (Carbon Dating) ತಂತ್ರಜ್ಞಾನದ ಮೂಲಕ ಈ ಗುಹೆಯು ಶಿಲಾಯುಗದ (Stone Age) ಕಾಲದ್ದಾಗಿದ್ದು, ಇಲ್ಲಿ ಆದಿಮಾನವರು ವಾಸಿಸುತ್ತಿದ್ದರು ಎಂಬ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಪುರಾತತ್ವಶಾಸ್ತ್ರಜ್ಞರು ಘೋಷಿಸಿದ್ದಾರೆ.&lt;/p&gt;&lt;p&gt;ಖ್ಯಾತ ಪುರಾತತ್ವಶಾಸ್ತ್ರಜ್ಞ ರವಿ ಕೋರಿಸೆಟ್ಟರ್ ಅವರು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ್ದು, &quot;ಗುಹೆಯ ಮೇಲ್ಮೈ ಭಾಗದಲ್ಲಿ ದೊರೆತ ಮಾನವನ ಮೂಳೆಯ ತುಣುಕು ಹಾಗೂ ಸೂಕ್ಷ್ಮ ಶಿಲಾ ಉಪಕರಣದ (Microlith) ಮೇಲೆ ಅಹಮದಾಬಾದ್&zwnj;ನ ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿ (PRL) ಮತ್ತು ಐಐಟಿ ಗಾಂಧಿನಗರದ ಆರ್ಕಿಯಾಲಜಿ ಸೈನ್ಸ್ ಸೆಂಟರ್ ಸಹಯೋಗದೊಂದಿಗೆ ರೇಡಿಯೋಕಾರ್ಬನ್ ಡೇಟಿಂಗ್ ನಡೆಸಲಾಯಿತು. ಈ ಪರೀಕ್ಷೆಯಿಂದ ಈ ಮಾನವ ವಾಸಸ್ಥಾನವು ಬರೋಬ್ಬರಿ 10,000 ವರ್ಷಗಳಷ್ಟು ಹಳೆಯದು ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದೆ,&quot; ಎಂದು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;2024ರಲ್ಲಿ ಬೆಳಕಿಗೆ ಬಂದಿದ್ದ 'ರಶೀದ್ ಪಾಡಿ' ಗುಹೆ&lt;/strong&gt;&lt;/h2&gt;&lt;p&gt;ಸ್ಥಳೀಯ ತಪಸ್ವಿಯೊಬ್ಬರ ಹೆಸರನ್ನಿಡಲಾಗಿರುವ ಈ ಗುಹೆಯನ್ನು 'ರಶೀದ್ ಪಾಡಿ' ಎಂದು ಕರೆಯಲಾಗುತ್ತದೆ. 2024 ರಲ್ಲಿ ರವಿ ಕೋರಿಸೆಟ್ಟರ್ ನೇತೃತ್ವದ ಪುರಾತತ್ವ ಆಸಕ್ತರ ತಂಡ, ಪರಿಸರವಾದಿ ಸಮದ್ ಕೊಟ್ಟೂರು, ಬಳ್ಳಾರಿ ಹೆರಿಟೇಜ್ ಟ್ರಸ್ಟ್&zwnj;ನ ಸದಸ್ಯರು ಹಾಗೂ ಬಳ್ಳಾರಿಯ ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪುರಾತತ್ವ ವಸ್ತುಸಂಗ್ರಹಾಲಯದ ಸಹವರ್ತಿಗಳು ಜಂಟಿಯಾಗಿ ಈ ತಾಣವನ್ನು ಸಾರ್ವಜನಿಕರ ಗಮನಕ್ಕೆ ತಂದಿದ್ದರು.&lt;/p&gt;&lt;p&gt;ಸಾಮಾನ್ಯವಾಗಿ ಭಾರತದಲ್ಲಿ ಕಂಡುಬರುವ ಬಹುತೇಕ ಗುಹೆಗಳು ಸುಣ್ಣದ ಕಲ್ಲುಗಳಿಂದ (Limestones) ರೂಪುಗೊಂಡಿರುತ್ತವೆ. ಆದರೆ ಸಂಡೂರು ಅರಣ್ಯದ ಈ ಗುಹೆಗಳು ವಿಭಿನ್ನವಾಗಿವೆ. ಇವು ಸುಣ್ಣದ ಕಲ್ಲಿನಿಂದ ನಿರ್ಮಾಣವಾಗಿಲ್ಲ; ಬದಲಿಗೆ, ಕೋಟ್ಯಂತರ ವರ್ಷಗಳ ಹಿಂದೆ ಭೂಮಿಯ ಒಳಗಿನ ಟೆಕ್ಟೋನಿಕ್ ತಲ್ಲಣಗಳು ಹಾಗೂ ಬಂಡೆಗಳ ಮೇಲ್ಮುಖ ಉಬ್ಬುವಿಕೆಯಿಂದ (Tectonic Uplift) ನೈಸರ್ಗಿಕವಾಗಿ ಸೃಷ್ಟಿಯಾಗಿವೆ ಎಂದು ಪ್ರೊ. ಕೋರಿಸೆಟ್ಟರ್ ವಿವರಿಸಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ಭಾರತದಲ್ಲೇ ಇಂತಹ ಮತ್ತೊಂದು ತಾಣವಿಲ್ಲ ಎಂದ ತಜ್ಞರು&lt;/strong&gt;&lt;/h2&gt;&lt;p&gt;ರಶೀದ್ ಪಾಡಿಯಲ್ಲಿ ಆದಿಮಾನವರ ವಸಾಹತು ಇತ್ತು ಎಂಬುದಕ್ಕೆ ಪ್ರಬಲ ಪುರಾವೆಗಳು ಸಿಕ್ಕಿವೆ. ಸಮುದ್ರ ಮಟ್ಟದಿಂದ 850 ಮೀಟರ್ ಎತ್ತರದಲ್ಲಿರುವ ಈ ತಾಣವು ಸಂಪೂರ್ಣವಾಗಿ ದಟ್ಟ ಅರಣ್ಯದಿಂದ ಆವೃತವಾಗಿದೆ. ಭಾರತದ ಇತಿಹಾಸದಲ್ಲೇ ಇಷ್ಟು ಎತ್ತರದ ಹೈ-ಆಲ್ಟಿಟ್ಯೂಡ್ ಪ್ರದೇಶದಲ್ಲಿ ಆದಿಮಾನವ ನೆಲೆಸಿದ್ದ ಉದಾಹರಣೆ ಬೇರೆಲ್ಲೂ ಇಲ್ಲ. ಈ ಗುಹೆಯು ಸುಮಾರು 100 ಅಡಿ ಎತ್ತರವಿದ್ದು, ಗುಹೆಯ ತಳಭಾಗವು 45 ಅಡಿ ವಿಸ್ತಾರವಾಗಿದೆ. ಇಲ್ಲಿ ಪತ್ತೆಯಾಗಿರುವ ಹಲವಾರು ಶಿಲಾ ಉಪಕರಣಗಳು ಮತ್ತು ಪ್ರಾಣಿಗಳ ಮೂಳೆಗಳು ನಮ್ಮ ವಾದಕ್ಕೆ ದೃಢವಾದ ಬೆಂಬಲ ನೀಡುತ್ತವೆ,&quot; ಎಂದು ಕೋರಿಸೆಟ್ಟರ್ ಹೇಳಿದ್ದಾರೆ.&lt;/p&gt;&lt;p&gt;ಸಂಡೂರಿನ ದಟ್ಟ ಅರಣ್ಯದ ಮಧ್ಯೆ ಇರುವ ಈ ಗುಹೆಗಳನ್ನು ಅನ್ವೇಷಿಸುವುದು ಸಂಶೋಧನಾ ತಂಡಕ್ಕೆ ಅತ್ಯಂತ ಕಠಿಣವಾದ ಸವಾಲಾಗಿತ್ತು. ಆದರೂ ತಂಡವು ಸಂಡೂರು ಕಾಡಿನ ವಿವಿಧ ಗುಹೆಗಳಿಗೆ ಭೇಟಿ ನೀಡಿ ಪರಿಶೀಲಿಸಿದೆ. ತಾರಾನಗರದ ಸಮೀಪವಿರುವ ರಶೀದ್ ಪಾಡಿ, ದೇವಧಾರಿ ಪಾಡಿ, ರಾಮ ಪಾಡಿ, ಭೈರವ ತೀರ್ಥ ಪಾಡಿ ಹಾಗೂ ಕುಮಾರಸ್ವಾಮಿ ದೇವಾಲಯದ ಸಮೀಪವಿರುವ ಭೀಮ ತೀರ್ಥ, ಹರಿಶಂಕರ ತೀರ್ಥ, ನವಿಲು ತೀರ್ಥ ಮತ್ತು ಕಪ್ಪರ ಗುಪ್ಪರ ಸ್ವಾಮಿ ಪಾಡಿ ಮುಂತಾದ ಗುಹಾ ತಾಣಗಳನ್ನು ತಂಡವು ಕೂಲಂಕಷವಾಗಿ ಪರಿಶೋಧಿಸಿದೆ.&lt;/p&gt;&lt;h2&gt;&lt;strong&gt;ಮುಂದುವರಿದ ಸಂಶೋಧನೆ - ಆದಿಮಾನವರ ಜೀವನ ಶೈಲಿ ಪತ್ತೆ&lt;/strong&gt;&lt;/h2&gt;&lt;p&gt;ಇಲ್ಲಿ ದೊರೆತಿರುವ ಕೆಲವು ಸೂಕ್ಷ್ಮ ಶಿಲಾ ಉಪಕರಣಗಳು ಮಧ್ಯಶಿಲಾಯುಗದ (Mesolithic Period) ಸಂಸ್ಕೃತಿಯನ್ನು ಹೋಲುತ್ತವೆ. ಹಾಗೆಯೇ ಇಲ್ಲಿ ಸಿಕ್ಕಿರುವ ಮೂಳೆಗಳು ಸಾಕುಪ್ರಾಣಿಗಳದ್ದಾಗಿರಬಹುದು ಎಂದು ಶಂಕಿಸಲಾಗಿದೆ. ಇದರೊಂದಿಗೆ ಕಾಡು ಪ್ರಾಣಿಗಳ ಮೂಳೆ ಹಾಗೂ ಹಲ್ಲುಗಳ ಅವಶೇಷಗಳೂ ಪತ್ತೆಯಾಗಿದ್ದು, ಇವುಗಳನ್ನು ಮುಂದಿನ ಹಂತದ ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.&lt;/p&gt;&lt;p&gt;&quot;2024ರಲ್ಲಿ ಈ ಗುಹೆಗಳು ಪತ್ತೆಯಾದಾಗ, ಆದಿಮಾನವನು ಸಸ್ಯಹಾರಿ ಆಹಾರ, ಬೇಟೆಯಾಡಲು ಪ್ರಾಣಿಗಳು ಮತ್ತು ಕಲ್ಲಿನ ಉಪಕರಣಗಳನ್ನು ತಯಾರಿಸಲು ಸೂಕ್ತವಾದ ಬಂಡೆಗಳನ್ನು ಹುಡುಕುತ್ತಾ ಈ ದುರ್ಗಮ ಪ್ರದೇಶಕ್ಕೆ ಯಾವಾಗ ಪ್ರವೇಶಿಸಿದ ಎಂಬ ಯಕ್ಷಪ್ರಶ್ನೆ ನಮ್ಮನ್ನು ಕಾಡುತ್ತಿತ್ತು. ಆ ಪ್ರಶ್ನೆಗೆ ಈಗ ಕಾರ್ಬನ್ ಡೇಟಿಂಗ್ ಮೂಲಕ ನಿಖರ ಉತ್ತರ ಸಿಕ್ಕಿದೆ,&quot; ಎಂದು ಕೋರಿಸೆಟ್ಟರ್ ಸಂಶೋಧನೆಯ ಮಹತ್ವವನ್ನು ವಿವರಿಸಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>ballari</category>
            <dc:creator>Santosh Naik</dc:creator>
            <atom:link href="https://kannada.asianetnews.com/ballari/sandur-caves-karnataka-carbon-dating-oldest-human-habitat-san/articleshow-8pxxkdi"/>
        </item>
        <item>
            <title><![CDATA[Ballari  ಕೋಳೂರಿನಲ್ಲಿ ಜೈನ ಧರ್ಮದ 4 ಅಪರೂಪದ ಜಿನಮೂರ್ತಿ ಶಿಲ್ಪ ಪತ್ತೆ, ಇದು ಸಲ್ಲೇಖನ ಪ್ರತಿಜ್ಞೆ ಸಂಕೇತ]]></title>
            <link>https://kannada.asianetnews.com/karnataka-districts/rare-vijayanagara-era-jain-sculptures-discovered-in-kurugodu-kolur-village-in-ballari-gdp/articleshow-ag8iggp</link>
            <guid isPermaLink="true">https://kannada.asianetnews.com/karnataka-districts/rare-vijayanagara-era-jain-sculptures-discovered-in-kurugodu-kolur-village-in-ballari-gdp/articleshow-ag8iggp</guid>
            <pubDate>Fri, 14 Aug 2026 11:35:22 +0530</pubDate>
            <description><![CDATA[ಬಳ್ಳಾರಿಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಕೃಷಿ ಹೊಲಗಳಲ್ಲಿ, ವಿಜಯನಗರ ಸಾಮ್ರಾಜ್ಯ ಸಂಶೋಧನಾ ತಂಡವು ಜೈನರ 'ಸಲ್ಲೇಖನ ವ್ರತ' ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಾರುವ ನಾಲ್ಕು ಅಪರೂಪದ ಗ್ರಾನೈಟ್ ಶಿಲ್ಪಗಳನ್ನು ಪತ್ತೆಹಚ್ಚಿದೆ. ಕಲ್ಯಾಣಿ ಚಾಲುಕ್ಯರ ಕಾಲದ ಶಾಸನದಿಂದ ಪ್ರೇರಿತವಾದ ಈ ಶೋಧವು, ಈ ಪ್ರದೇಶದ ಜೈನ ಧರ್ಮದ ಐತಿಹಾಸಿಕ ಮಹತ್ವದ ಮೇಲೆ ಹೊಸ ಬೆಳಕು ಚೆಲ್ಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzzdntchkbjjpec0m2zmqv7s,imgname-jain-sculptures-1786687187345.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುರುಗೋಡು: &lt;/strong&gt;ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಕೃಷಿ ಹೊಲಗಳಲ್ಲಿ ಜೈನ ಧರ್ಮದ &lsquo;ಸಲ್ಲೇಖನ ವ್ರತ&rsquo; ಹಾಗೂ ಸಾಂಸ್ಕೃತಿಕ ಪರಂಪರೆಯ ಮೇಲೆ ಬೆಳಕು ಚೆಲ್ಲುವ ನಾಲ್ಕು ಅಪರೂಪದ ಗ್ರಾನೈಟ್ ಶಿಲ್ಪಗಳನ್ನು ವಿಜಯನಗರ ಸಾಮ್ರಾಜ್ಯ ಸಂಶೋಧನಾ ತಿರುಗಾಟ ತಂಡವು ಪತ್ತೆಹಚ್ಚಿದೆ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಎಚ್. ತಿಪ್ಪೇಸ್ವಾಮಿ ಅವರ ನೇತೃತ್ವದ ಅಧ್ಯಯನ ತಂಡವು ನಡೆಸಿದ ಕ್ಷೇತ್ರಕಾರ್ಯದ ವೇಳೆ ಈ ಪ್ರಮುಖ ಐತಿಹಾಸಿಕ ಕುರುಹುಗಳು ಬೆಳಕಿಗೆ ಬಂದಿದೆ.&lt;/p&gt;&lt;h2&gt;ಶಾಸನಗಳ ಅಧ್ಯಯನದಿಂದ ಶುರುವಾದ ಶೋಧ&lt;/h2&gt;&lt;p&gt;ಕೋಳೂರು ಗ್ರಾಮದ ಮಧ್ಯಭಾಗದಲ್ಲಿರುವ ಪುರಾತನ ಸೂರ್ಯನಾರಾಯಣ ದೇವಸ್ಥಾನದಲ್ಲಿ ಲಭ್ಯವಿರುವ ಬೃಹತ್ ಶಾಸನವು ಈ ಮಹತ್ವದ ಶೋಧಕ್ಕೆ ಮೂಲ ಪ್ರೇರಣೆಯಾಗಿದೆ. ಈ ದೇವಾಲಯದಲ್ಲಿರುವ 103 ಸಾಲುಗಳ ಬೃಹತ್ ಕಲ್ಲಿನ ಶಾಸನವನ್ನು ಕನ್ನಡ ಲಿಪಿಯಲ್ಲಿ ಸಂಸ್ಕೃತ ಭಾಷೆಯ ಮೂಲಕ ಬರೆಯಲಾಗಿದೆ. ಕಲ್ಯಾಣಿ ಚಾಲುಕ್ಯರ ದೊರೆ ಜಗದೇಕಮಲ್ಲನ ಕಾಲದಲ್ಲಿ ಪಾಳೆಗಾರನಾಗಿದ್ದ (ಸಾಮಂತ) ಇಮ್ಮಡಿ ಭೀಮರಸನಿಗೆ ಸೇರಿದ ಈ ಶಾಸನವು ಈಗಾಗಲೇ ಬಳ್ಳಾರಿ ಜಿಲ್ಲಾ ಶಾಸನ ಸಂಪುಟದಲ್ಲಿ ಪ್ರಕಟಗೊಂಡಿದೆ. ಈ ಶಾಸನದಲ್ಲಿ ಪ್ರಾಚೀನ ನಂದ ಮತ್ತು ಮೌರ್ಯ ರಾಜವಂಶಗಳ ಉಲ್ಲೇಖವಿರುವುದನ್ನು ಗಮನಿಸಿದ ಸಂಶೋಧಕರ ತಂಡ, ಗ್ರಾಮದ ಸುತ್ತಮುತ್ತ ಆ ಕಾಲದ ಹೆಚ್ಚಿನ ಐತಿಹಾಸಿಕ ಆಧಾರಗಳು ಸಿಗಬಹುದು ಎಂಬ ನಿರೀಕ್ಷೆಯಿಂದ ತಪಾಸಣೆ ಕೈಗೊಂಡಿತು. ಅದರಂತೆ ಕೃಷಿ ಭೂಮಿಯ ಆಗ್ನೇಯ, ಈಶಾನ್ಯ, ನೈಋತ್ಯ ಮತ್ತು ವಾಯುವ್ಯ ದಿಕ್ಕುಗಳಲ್ಲಿ ಸಮೀಕ್ಷೆ ನಡೆಸಿದಾಗ ಈ ಸುಂದರ ಜೀನಮೂರ್ತಿ ಶಿಲ್ಪಗಳು ಕಂಡುಬಂದವು.&lt;/p&gt;&lt;h2&gt;ಜಿನಮೂರ್ತಿಗಳ ಕಲಾತ್ಮಕ ವಿನ್ಯಾಸ ಮತ್ತು ವಿಶೇಷತೆ&lt;/h2&gt;&lt;p&gt;ಪತ್ತೆಯಾಗಿರುವ ನಾಲ್ಕು ಜಿನಮೂರ್ತಿ ಶಿಲ್ಪಗಳನ್ನು ಗಟ್ಟಿ ಗ್ರಾನೈಟ್ ಕಲ್ಲಿನಲ್ಲಿ ಅತ್ಯಂತ ಕಲಾತ್ಮಕವಾಗಿ ಕೆತ್ತಲಾಗಿದೆ. ಇವು ಜೈನ ಮುನಿಗಳು ಕೈಗೊಳ್ಳುತ್ತಿದ್ದ ಸಲ್ಲೇಖನ ಪ್ರತಿಜ್ಞೆ ಹಾಗೂ ಪೂಜಾ ಪರಂಪರೆಯನ್ನು ಪ್ರತಿನಿಧಿಸುತ್ತವೆ. ಈ ಪೈಕಿ ಒಂದು ಬೃಹತ್ ಶಿಲ್ಪವು ಸುಮಾರು 7 ಅಡಿ ಎತ್ತರ ಮತ್ತು 3 ಅಡಿ ಅಗಲವಿದ್ದು, ಇದರ ಒಂದು ಸಣ್ಣ ಭಾಗ ಹಾನಿಗೊಳಗಾಗಿದೆ. ಉಳಿದ ಮೂರು ಶಿಲ್ಪಗಳು ತಲಾ 5 ಅಡಿ ಎತ್ತರ ಹಾಗೂ 3 ಅಡಿ ಅಗಲವನ್ನು ಹೊಂದಿವೆ. ನಾಲ್ಕೂ ಶಿಲ್ಪಗಳಲ್ಲಿ ಜಿನ ಮುನಿಗಳನ್ನು ಮೂರು ಹಂತದ ಮೇಲಾವರಣದ (ಮುಕ್ಕೊಡೆ) ಕೆಳಗೆ ಪದ್ಮಾಸನ ಭಂಗಿಯಲ್ಲಿ ಪ್ರಶಾಂತವಾಗಿ ಕುಳಿತಿರುವಂತೆ ಚಿತ್ರಿಸಲಾಗಿದೆ.&lt;/p&gt;&lt;h2&gt;ಸೂರ್ಯ-ಚಂದ್ರ ಹಾಗೂ ಶಾಪಾಶಯದ ಕೆತ್ತನೆ&lt;/h2&gt;&lt;p&gt;ಜಿನಮೂರ್ತಿಗಳ ಮೇಲ್ಭಾಗದ ಎಡಬದಿಯಲ್ಲಿ ಚಂದ್ರ ಮತ್ತು ಬಲಬದಿಯಲ್ಲಿ ಸೂರ್ಯನ ಚಿತ್ರಗಳನ್ನು ಕೆತ್ತಲಾಗಿದ್ದು, ಇವು ಸೂರ್ಯ-ಚಂದ್ರರಿರುವವರೆಗೆ ಈ ಧರ್ಮ ಹಾಗೂ ಕೀರ್ತಿ ಸ್ಥಿರವಾಗಿರಲಿ ಎಂಬುದನ್ನು ಸೂಚಿಸುತ್ತವೆ. ಇನ್ನು ಶಿಲ್ಪದ ತಳಭಾಗದಲ್ಲಿ ಹಸು ಮತ್ತು ಖಡ್ಗದ ಚಿತ್ರಗಳನ್ನು ಸ್ಪಷ್ಟವಾಗಿ ಕೆತ್ತಲಾಗಿದೆ. ಈ ಪವಿತ್ರ ಶಿಲ್ಪಗಳಿಗೆ ಹಾನಿ ಮಾಡುವವರು ಅಥವಾ ನಾಶಪಡಿಸುವವರು ಹಸುವನ್ನು ಕೊಂದ ಮಹಾಪಾಪಕ್ಕೆ ಗುರಿಯಾಗುತ್ತಾರೆ ಎಂಬ ಎಚ್ಚರಿಕೆಯ ಸಂಕೇತ ಇದಾಗಿದೆ.&lt;/p&gt;&lt;p&gt;ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಶ್ರೇಣಿ ಸಹಾಯಕ ಪ್ರಾಧ್ಯಾಪಕರಾದ ಡಾ. ಗೋವಿಂದ್ ಅವರು ನೀಡಿರುವ ಮಾಹಿತಿಯಂತೆ, ಈ ಶಿಲ್ಪಗಳಲ್ಲಿ ಯಾವುದೇ ರೀತಿಯ ಲಿಪಿ ಅಥವಾ ಅಕ್ಷರಗಳು ಕೆತ್ತಲ್ಪಟ್ಟಿಲ್ಲ. ಆದರೂ, ಇವುಗಳ ಶೈಲಿ, ಕಲಾತ್ಮಕ ಲಕ್ಷಣಗಳು , ಕುರುಹುಗಳು ಇವು ಜೈನ ಧರ್ಮಕ್ಕೆ ಸಂಪೂರ್ಣವಾಗಿ ಸಂಬಂಧಿಸಿದವು ಎಂಬುದನ್ನು ಸ್ಪಷ್ಟಪಡಿಸುತ್ತವೆ. ಈ ಪ್ರದೇಶದಲ್ಲಿ ಈ ಹಿಂದೆ ಜೈನಧರ್ಮದವರು ವಾಸವಾಗಿದ್ದರು ಎನ್ನುವುದಕ್ಕೆ ಈ ನಾಲ್ಕು ಶಿಲ್ಪಗಳು ಸಾಕ್ಷಿಯಾಗಿ ನಿಂತಿವೆ.&lt;/p&gt;&lt;h2&gt;ಸ್ಥಳೀಯರ ಆರಾಧನೆ ಮತ್ತು ಧಾರ್ಮಿಕ ಪರಿವರ್ತನೆ&lt;/h2&gt;&lt;p&gt;ದೃಶ್ಯಕಲಾ ವಿಭಾಗದ ಡಾ. ಕೃಷ್ಣೇಗೌಡ ಅವರು ತಿಳಿಸಿರುವಂತೆ, ಈ ಭಾಗದಲ್ಲಿ ಹಿಂದೆ ಜೈನ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದರು ಮತ್ತು ಜೈನ ಸಂಸ್ಕೃತಿ ಪ್ರಭಾವಶಾಲಿಯಾಗಿತ್ತು ಎಂಬುದಕ್ಕೆ ಈ ನಾಲ್ಕು ಶಿಲ್ಪಗಳೇ ಜ್ವಲಂತ ಸಾಕ್ಷಿಯಾಗಿವೆ. ಆದರೆ ಕಾಲಕ್ರಮೇಣ ಈ ಶಿಲ್ಪಗಳ ನೈಜ ಐತಿಹಾಸಿಕ ಹಿನ್ನೆಲೆಯ ಅರಿವಿಲ್ಲದೆ, ಸ್ಥಳೀಯ ಗ್ರಾಮಸ್ಥರು ಇವುಗಳನ್ನು ಬೇರೆ ಬೇರೆ ದೇವತೆಗಳ ಹೆಸರಿನಲ್ಲಿ ಪೂಜಿಸುತ್ತಾ ಬಂದಿದ್ದಾರೆ. ಈ ಶಿಲ್ಪಗಳಲ್ಲಿ ಒಂದನ್ನು 'ವೀರಭದ್ರ' ಎಂದು ಕರೆದರೆ, ಉಳಿದ ಮೂರು ಶಿಲ್ಪಗಳನ್ನು 'ಖಾಜಾಪಿರ್', 'ದೊಡ್ಡ ಸಂಕ್ರಮಣ' ಮತ್ತು 'ಸಣ್ಣ ಸಂಕ್ರಮಣ' ಎಂಬ ವಿಭಿನ್ನ ಹೆಸರುಗಳಿಂದ ಆರಾಧಿಸಲಾಗುತ್ತಿದೆ.&lt;/p&gt;&lt;h2&gt;ಸಂಶೋಧನಾ ತಂಡ ಮತ್ತು ಮುಂದಿನ ನಿರೀಕ್ಷೆಗಳು&lt;/h2&gt;&lt;p&gt;ಈ ಮಹತ್ವದ ಪತ್ತೆಯ ಕಾರ್ಯದಲ್ಲಿ ಪ್ರೊ. ಎಚ್. ತಿಪ್ಪೇಸ್ವಾಮಿ, ಡಾ. ಗೋವಿಂದ್, ಡಾ. ಕೃಷ್ಣೇಗೌಡ ಅವರೊಂದಿಗೆ ಸಂಶೋಧಕರಾದ ದಾದಾ ಖಲಂದರ್, ಇಸ್ಮಾಯಿಲ್ ಸಿದ್ದಿಕಿ, ಅಶೋಕ್ ನಾಯಕ್ ದಿಡ್ಡಿಗಿ, ಕೆ. ಶಿವರಾಮಪ್ಪ ಹಾಗೂ ಬಂಡ್ರಿ ಪಾಪಯ್ಯ ಭಾಗವಹಿಸಿದ್ದರು. ಕ್ಷೇತ್ರ ಅಧ್ಯಯನದ ಸಮಯದಲ್ಲಿ ಸ್ಥಳೀಯ ವಕೀಲರಾದ ಕೆ. ಲಕ್ಷ್ಮಣ್ ಮತ್ತು ಮಲ್ಲಿಕಾರ್ಜುನ ಅವರು ಸಂಶೋಧನಾ ತಂಡಕ್ಕೆ ಅಗತ್ಯ ಮಾರ್ಗದರ್ಶನ ಹಾಗೂ ನೆರವು ನೀಡಿದರು.&lt;/p&gt;&lt;p&gt;ಈ ಪ್ರದೇಶದಲ್ಲಿ ಪುರಾತತ್ವ ಇಲಾಖೆ ಹಾಗೂ ಸಂಬಂಧಪಟ್ಟ ಸರ್ಕಾರಿ ಸಂಸ್ಥೆಗಳು ಮುಂದಿನ ದಿನಗಳಲ್ಲಿ ಸಮಗ್ರ ಉತ್ಖನನ ಮತ್ತು ವೈಜ್ಞಾನಿಕ ಅಧ್ಯಯನಗಳನ್ನು ಕೈಗೊಂಡರೆ, ಬಳ್ಳಾರಿ ಪ್ರದೇಶದಲ್ಲಿ ಜೈನ ಧರ್ಮದ ಹರಡುವಿಕೆ, ರಾಜ್ಯಶ್ರಯ ಮತ್ತು ಧಾರ್ಮಿಕ ಸಹವಾಳದ ಕುರಿತು ಇನ್ನಷ್ಟು ಅಪರೂಪದ ಐತಿಹಾಸಿಕ ಸಾಕ್ಷ್ಯಾಧಾರಗಳು ಬೆಳಕಿಗೆ ಬರಲಿವೆ ಎಂದು ಪ್ರೊ. ಎಚ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-vijayanagara-era-jain-sculptures-discovered-in-kurugodu-kolur-village-in-ballari-gdp/articleshow-ag8iggp"/>
        </item>
        <item>
            <title><![CDATA[Hampi Excavation: ಹಂಪಿ ಉತ್ಖನನ ವೇಳೆ ಅಪರೂಪದ ವಿಗ್ರಹಗಳು ಪತ್ತೆ; ಏನಿದರ ವಿಶೇಷತೆ?]]></title>
            <link>https://kannada.asianetnews.com/news/rare-garuda-and-naga-shilpa-idols-discovered-during-hampi-excavation-what-is-their-significance-sns/articleshow-clwylfg</link>
            <guid isPermaLink="true">https://kannada.asianetnews.com/news/rare-garuda-and-naga-shilpa-idols-discovered-during-hampi-excavation-what-is-their-significance-sns/articleshow-clwylfg</guid>
            <pubDate>Mon, 10 Aug 2026 12:16:10 +0530</pubDate>
            <description><![CDATA[&lt;p&gt;ಯುನೆಸ್ಕೋ ವಿಶ್ವಪರಂಪರೆಯ ತಾಣವಾದ ಹಂಪಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಲ್ಲಿ ವಿಜಯನಗರ ಕಾಲದ ಅಪರೂಪದ ಶಿಲ್ಪಗಳು ಪತ್ತೆಯಾಗಿವೆ. ಮಾನವ ಮತ್ತು ಹಾವಿನ ಲಕ್ಷಣಗಳಿರುವ ನಾಗಿಣಿ ಶಿಲ್ಪ ಹಾಗೂ ಗರುಡ ಶಿಲ್ಪ ಇದರಲ್ಲಿ ಸೇರಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzn6ern1fqj3867anzfr0kvx,imgname-hampi--1786344071841.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ: &lt;/strong&gt;ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಈ ಉತ್ಖನನ ವೇಳೆ ಮಾನವ ಮತ್ತು ಹಾವಿನ ಲಕ್ಷಣಗಳನ್ನು ಹೊಂದಿರುವ ಸ್ತ್ರೀ ರಕ್ಷಕ ರೂಪದ ನಾಗಿಣಿ ಶಿಲ್ಪ ಹಾಗೂ ಗಡುರ ಶಿಲ್ಪ ಪತ್ತೆಯಾಗಿದೆ. ಸದ್ಯ ಈ ವಿಗ್ರಹಗಳ ಕುರಿತು ಹೆಚ್ಚಿನ ಅಧ್ಯಯನ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.&lt;/p&gt;&lt;h2&gt;ವಿಜಯನಗರ ಸಾಮ್ರಾಜ್ಯದ ಇತಿಹಾಸ ಇನ್ನಷ್ಟು ಸಮೃದ್ಧ&lt;/h2&gt;&lt;p&gt;ನಾಗಿಣಿ ಶಿಲ್ಪ ಸುಮಾರು30 ಸೆಂ.ಮೀ ಅಗಲ, 51 ಸೆಂ.ಮೀ ಉದ್ದವಿದೆ. ಗರುಡ ಶಿಲ್ಪಕ್ಕೆ ತಲೆ ಇಲ್ಲದೆ ಸಿಕ್ಕಿದ್ದು, ಇದು 32 ಸೆಂ.ಮೀ ಅಗಲ, 37 ಸೆಂ.ಮೀ ಉದ್ದವಿದೆ. ಸದ್ಯ ಪತ್ತೆಯಾಗಿರುವ ಶಿಲ್ಪಗಳನ್ನು ಸರಿಯಾಗಿ ದಾಖಲಿಸಿ, ಅವುಗಳನ್ನನು ಸಂರಕ್ಷಣೆ ಮಾಡುವ ಕಾರ್ಯವನ್ನು ಅಧಿಕಾರಿಗಳು ಮಾಡಲಿದ್ದು, ಇದು ವಿಜಯನಗರ ಸಾಮ್ರಾಜ್ಯದ ಕುರಿತ ಇತಿಹಾಸ ಇನ್ನಷ್ಟು ಸಮೃದ್ಧಗೊಳಿಸುತ್ತದೆ.&lt;/p&gt;&lt;p&gt;ವಿಜಯನಗರ ಸಾಮ್ರಾಜ್ಯದ ಕಾಲ 14 ಮತ್ತು 15ನೇ ಶತಮಾನದ ಅತ್ಯಾಧುನಿಕ ನೀರು ನಿರ್ವಹಣೆ, ಹಿಂದೂ-ಜೈನ ಸಹಬಾಳ್ವೆ, ವಾಸ್ತುಕಲೆಯನ್ನು ಈ ಉತ್ಖನನಗಳು ಎತ್ತಿತೋರಿಸುತ್ತವೆ. ಈ ಹಿಂದಿನ ಉತ್ಖನನದ ವೇಳೆಯೂ ಪ್ರಾಚೀನ ಜೈನ ದೇವಾಲಯದ ಛಾವಣಿ, ಇಟ್ಟಿಗೆಗಳಿಂದ ನಿರ್ಮಾಣವಾಗಿದ್ದ ಕಟ್ಟಡದ ಭಾಗಗಳು ಪತ್ತೆಯಾಗಿತ್ತು. ಜೊತೆಗೆ ನಾಶಗೊಳಿಸಲಾಗಿದ್ದ ಆಳ್ವಾರ್ ವಿಗ್ರಹ, ಕಲ್ಲಿನ ಕಾಲುವೆ ಕೂಡ ಇತಿಹಾಸ ಆಸಕ್ತರ ಗಮನ ಸೆಳೆದಿದ್ದವು.&lt;/p&gt;&lt;h2&gt;ಇನ್ನಷ್ಟು ಹೆಚ್ಚಿನ ಅಧ್ಯಯನ ನಡೆಯುತ್ತದೆ&lt;/h2&gt;&lt;p&gt;ಸದ್ಯ ಹಂಚಿ ಜೈನ ದೇಗುಲದ ಸಂಕೀರ್ಣದ ಸುತ್ತಮುತ್ತ ಹಾಗೂ ರಾಮ ದೇವಸ್ಥಾನ ಬಳಿ ಎಎಸ್&zwnj;ಐ ನಿರಂತರವಾಗಿ ಉತ್ಖನನ ನಡೆಸುತ್ತಿದ್ದು, ಈ ಬಗ್ಗೆ ಎಎಸ್&zwnj;ಐ ಹಂಪಿ ವೃತ್ತದ ಅಧೀಕ್ಷಕ ಪುರಾತತ್ವ ತಜ್ಞ ಕೆ ರಾಮಕೃಷ್ಣ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಸದ್ಯ ಪತ್ತೆಯಾಗಿರುವ ಶಿಲ್ಪಗಳು ವಿವಿಧ ಧಾರ್ಮಿಕ ಮತ್ತು ಕಲಾ ಪರಂಪರೆಗಳನ್ನು ಪ್ರತಿನಿಧಿಸುತ್ತದೆ. ಶಿಲ್ಪಗಳ ಲಕ್ಷಣ, ಅವುಗಳು ಪತ್ತೆಯಾದ ಸ್ಥಳ ಬಗ್ಗೆ ವಿವರವಾದ ಅಧ್ಯಯನ ನಡೆಯಲಿದೆ. ಇವು ವಿಜಯನಗರ ಸಾಮ್ರಾಜ್ಯ ಕಾಲದ ಧಾರ್ಮಿಕ ಸಹಿಷ್ಣುತೆ, ವಾಸ್ತು ಶಿಲ್ಪ ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಬಗ್ಗೆ ದೊರೆತಿರುವ ಮಹತ್ವ ಸುಳಿವು ಎಂದು ಬಣ್ಣಿಸಿರುವ ರಾಮಕೃಷ್ಣ ರೆಡ್ಡಿ ಅವರು, ಇವುಗಳ ಇನ್ನಷ್ಟು ವಿವರವಾದ ಅಧ್ಯಯನ ಮಾಡಿ ಸುತ್ತಮುತ್ತಿನ ರಚನೆಗಳೊಂದಿಗೆ ಇರುವ ಸಂಬಂಧವನ್ನು ಅರ್ಥಮಾಡಿಕೊಂಡು ವಿವರಣೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಕರ್ನಾಟಕದ ಹಂಪಿ ವಿಜಯನಗರ ಸಾಮಾಜ್ಯದ ರಾಜಧಾನಿ ಆಗಿತ್ತು. ದಕ್ಷಿಣ ಭಾರತದ ಅತ್ಯಂತ ಪ್ರಬಲ ಸಾಮ್ರಾಜ್ಯಗಳಲ್ಲಿ ಒಂದಾಗಿರುವ ಇದನ್ನು ಕರ್ನಾಟ ಸಾಮ್ರಾಜ್ಯ ಎಂದು ಕರೆಯಲಾಗುತ್ತದೆ. ದೆಹಲಿ ಸುಲ್ತಾನರ ಆಕ್ರಣಗಳಿಂದ ದಕ್ಷಿಣ ಭಾರತವನ್ನು ರಕ್ಷಣೆ ಮಾಡುವಲ್ಲಿ ಈ ಸಾಮ್ರಾಜ್ಯ ಪ್ರಮುಖ ಪಾತ್ರವಹಿಸಿತ್ತು ಎಂದು ಇತಿಹಾಸ ತಜ್ಞರು ಹೇಳಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Sumanth SN</dc:creator>
            <atom:link href="https://kannada.asianetnews.com/news/rare-garuda-and-naga-shilpa-idols-discovered-during-hampi-excavation-what-is-their-significance-sns/articleshow-clwylfg"/>
        </item>
        <item>
            <title><![CDATA[ಬಳ್ಳಾರಿ-ಗುಂತಕಲ್ ರೈಲ್ವೆ ಮಾರ್ಗ ವಿಸ್ತರಣೆಗೆ ಕೇಂದ್ರ ಕ್ಯಾಬಿನೆಟ್‌ ಒಪ್ಪಿಗೆ: ₹1,264 ಕೋಟಿ ವೆಚ್ಚದಲ್ಲಿ 3 ಮತ್ತು 4ನೇ ರೈಲು ಹಳಿ ನಿರ್ಮಾಣ!]]></title>
            <link>https://kannada.asianetnews.com/ballari/ballari-guntakal-railway-project-cabinet-approves-1264-crore-expansion-san/articleshow-eptwe84</link>
            <guid isPermaLink="true">https://kannada.asianetnews.com/ballari/ballari-guntakal-railway-project-cabinet-approves-1264-crore-expansion-san/articleshow-eptwe84</guid>
            <pubDate>Fri, 24 Jul 2026 17:26:41 +0530</pubDate>
            <description><![CDATA[&lt;p&gt;ಕೇಂದ್ರ ಸರ್ಕಾರವು ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವಿನ ಸಂಪರ್ಕವನ್ನು ವೃದ್ಧಿಸಲು ₹1,264 ಕೋಟಿ ವೆಚ್ಚದ 'ಬಳ್ಳಾರಿ-ಗುಂತಕಲ್' 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky9zhhv6vm0tvesaspqsejkf,imgname-ballari-guntakal-rail-line-expansion-1784893982566.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು /ನವದೆಹಲಿ (ಜು.24)&lt;/strong&gt;: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವಿನ ಸರಕು ಸಾಗಣೆ ಹಾಗೂ ಪ್ರಯಾಣಿಕರ ಸಂಚಾರವನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ, 'ಬಳ್ಳಾರಿ - ಗುಂತಕಲ್' ರೈಲ್ವೆ ವಿಭಾಗದ 3ನೇ ಮತ್ತು 4ನೇ ಮಾರ್ಗ (ರೈಲು ಹಳಿ) ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ಸುಮಾರು ₹1,264 ಕೋಟಿ ವೆಚ್ಚದ ಈ ಬೃಹತ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ವ್ಯಾಪ್ತಿಯ 3 ಜಿಲ್ಲೆಗಳನ್ನು ಒಳಗೊಳ್ಳುವ ಈ ಯೋಜನೆಯು ಭಾರತೀಯ ರೈಲ್ವೆಯ ಪ್ರಸ್ತುತ ಜಾಲಕ್ಕೆ ಸುಮಾರು 46 ಕಿಲೋಮೀಟರ್ ಹೊಸ ಮಾರ್ಗವನ್ನು ಸೇರ್ಪಡೆಗೊಳಿಸಲಿದೆ.&lt;/p&gt;&lt;p&gt;ಈ ಯೋಜನೆಯನ್ನು 'ಪಿಎಂ-ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್' (PM-Gati Shakti National Master Plan) ಅಡಿಯಲ್ಲಿ ರೂಪಿಸಲಾಗಿದೆ. ಸಮಗ್ರ ಯೋಜನೆ ಮತ್ತು ಸಂಬಂಧಿತ ಪಾಲುದಾರರ ಸಮಾಲೋಚನೆಯ ಮೂಲಕ ಬಹುಮಾದರಿ ಸಂಪರ್ಕ (Multi-modal connectivity) ಹಾಗೂ ಲಾಜಿಸ್ಟಿಕ್ಸ್ ದಕ್ಷತೆಯನ್ನು ಹೆಚ್ಚಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯಿಂದ ಸಾರ್ವಜನಿಕರ ಸಂಚಾರ, ಸರಕು ಮತ್ತು ಸೇವೆಗಳ ಸಾಗಣೆಗೆ ತಡೆರಹಿತ ಸಂಪರ್ಕ ಲಭ್ಯವಾಗಲಿದೆ.&lt;/p&gt;&lt;h2&gt;&lt;strong&gt;7 ಲಕ್ಷ ಜನಸಂಖ್ಯೆ, 99 ಹಳ್ಳಿಗಳಿಗೆ ನೆರವು&lt;/strong&gt;&lt;/h2&gt;&lt;p&gt;ಹೊಸದಾಗಿ ಕೈಗೆತ್ತಿಕೊಳ್ಳಲಿರುವ ಈ ಹಳಿ ದ್ವಿಗುಣಗೊಳಿಸುವ ಯೋಜನೆಯು ಈ ಭಾಗದ ಸುಮಾರು 7 ಲಕ್ಷ ಜನಸಂಖ್ಯೆ ಹೊಂದಿರುವ ಸರಿಸುಮಾರು 99 ಹಳ್ಳಿಗಳಿಗೆ ನೇರ ರೈಲು ಸಂಪರ್ಕ ಮತ್ತು ಸಾರಿಗೆ ಅನುಕೂಲವನ್ನು ಒದಗಿಸಲಿದೆ. ಮಾರ್ಗದ ಸಾಮರ್ಥ್ಯ ವಿಸ್ತರಣೆಯಿಂದಾಗಿ ದೇಶದ ಪ್ರಮುಖ ಪ್ರವಾಸಿ ತಾಣಗಳಾದ ಬಳ್ಳಾರಿ ಕೋಟೆ, ಪ್ರಸಿದ್ಧ ಶ್ರೀ ಕುಮಾರಸ್ವಾಮಿ ದೇವಾಲಯ ಸೇರಿದಂತೆ ಹಲವು ಪ್ರವಾಸಿ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸುಲಭ ರೈಲು ಸಂಪರ್ಕ ದೊರೆಯಲಿದೆ.&lt;/p&gt;&lt;h2&gt;&lt;strong&gt;ಸರಕು ಸಾಗಣೆಗೆ ಜೀವಕಳೆ; ವಾರ್ಷಿಕ 16.22 ಮಿಲಿಯನ್ ಟನ್ ಸರಕು&lt;/strong&gt;&lt;/h2&gt;&lt;p&gt;ಉಕ್ಕು, ಕಬ್ಬಿಣದ ಅದಿರು, ಡೋಲಮೈಟ್, ಸುಣ್ಣದ ಕಲ್ಲು (ಲೈಮ್&zwnj;ಸ್ಟೋನ್), ಕಬ್ಬಿಣ ಮತ್ತು ಉಕ್ಕು, ಕಲ್ಲಿದ್ದಲು, ರಸಗೊಬ್ಬರ ಹಾಗೂ ಆಹಾರ ಧಾನ್ಯಗಳಂತಹ ಅಗತ್ಯ ಸರಕುಗಳ ಸಾಗಣೆಗೆ ಈ ಬಳ್ಳಾರಿ-ಗುಂತಕಲ್ ಮಾರ್ಗವು ಅತ್ಯಂತ ಪ್ರಮುಖವಾಗಿದೆ. ಈ ವಿಸ್ತರಣಾ ಕಾಮಗಾರಿಯಿಂದಾಗಿ ಪ್ರತಿವರ್ಷ ಹೆಚ್ಚುವರಿಯಾಗಿ 16.22 ಮಿಲಿಯನ್ ಟನ್ (MTPA) ಸರಕು ಸಾಗಣೆ ಮಾಡಲು ಸಾಧ್ಯವಾಗಲಿದೆ.&lt;/p&gt;&lt;h2&gt;&lt;strong&gt;ಪರಿಸರ ಸ್ನೇಹಿ; 1.32 ಕೋಟಿ ಲೀಟರ್ ಇಂಧನ ಉಳಿತಾಯ&lt;/strong&gt;&lt;/h2&gt;&lt;p&gt;ರೈಲ್ವೆ ಸಾರಿಗೆಯು ಅತ್ಯಂತ ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ವ್ಯವಸ್ಥೆಯಾಗಿದ್ದು, ಭಾರತದ ಹವಾಮಾನ ಗುರಿಗಳನ್ನು ತಲುಪಲು ಹಾಗೂ ಸಾಗಣೆ ವೆಚ್ಚವನ್ನು (Logistics cost) ಕಡಿಮೆ ಮಾಡಲು ನೆರವಾಗಲಿದೆ. ಯೋಜನೆಯಿಂದಾಗಿ 1.32 ಕೋಟಿ ಲೀಟರ್ ಕಚ್ಚಾ ತೈಲ ಆಮದು ಉಳಿತಾಯವಾಗಲಿದೆ. 6.67 ಕೋಟಿ ಕಿಲೋಗ್ರಾಂ ಇಂಗಾಲದ ಡೈಆಕ್ಸೈಡ್ (CO2) ಹೊರಸೂಸುವಿಕೆ ಕಡಿಮೆಯಾಗಲಿದೆ. ಇದು ಸುಮಾರು 27 ಲಕ್ಷ (0.27 ಕೋಟಿ) ಗಿಡಗಳನ್ನು ನೆಡುವುದಕ್ಕೆ ಸಮಾನವಾಗಿದೆ. ಹಳಿಗಳ ಸಾಮರ್ಥ್ಯ ಹೆಚ್ಚಾಗುವುದರಿಂದ ರೈಲುಗಳ ಸಂಚಾರ ವೇಗಗೊಳ್ಳಲಿದ್ದು, ಭಾರತೀಯ ರೈಲ್ವೆಯ ಕಾರ್ಯಕ್ಷಮತೆ ಹಾಗೂ ಸೇವಾ ನಂಬಿಕೆಯನ್ನು ಹೆಚ್ಚಿಸಲಿದೆ.&lt;/p&gt;&lt;p&gt;&lt;/p&gt;]]></content:encoded>
            <category>ballari</category>
            <dc:creator>Santosh Naik</dc:creator>
            <atom:link href="https://kannada.asianetnews.com/ballari/ballari-guntakal-railway-project-cabinet-approves-1264-crore-expansion-san/articleshow-eptwe84"/>
        </item>
        <item>
            <title><![CDATA[B Nagendra: ವಾಲ್ಮೀಕಿ ನಿಗಮ ಹಗರಣ: ಬಿ ನಾಗೇಂದ್ರ ಪರ  ನಿಂತ ಬಳ್ಳಾರಿ ವಾಲ್ಮೀಕಿ ಸಂಘಟನೆ ಜಿಲ್ಲಾ ಮುಖಂಡ!]]></title>
            <link>https://kannada.asianetnews.com/politics/valmiki-corporation-scam-b-nagendra-supporters-press-conference-at-ballari-rav/articleshow-eq7ol7b</link>
            <guid isPermaLink="true">https://kannada.asianetnews.com/politics/valmiki-corporation-scam-b-nagendra-supporters-press-conference-at-ballari-rav/articleshow-eq7ol7b</guid>
            <pubDate>Wed, 12 Aug 2026 14:39:05 +0530</pubDate>
            <description><![CDATA[&lt;p&gt;ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರ ಮೇಲಿನ ಆರೋಪಗಳನ್ನು ಅವರ ಬೆಂಬಲಿಗರು ತಳ್ಳಿಹಾಕಿದ್ದಾರೆ. ಬಿಜೆಪಿ ನಾಯಕರು ವಿನಾಕಾರಣ ಟೀಕೆ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kztkdre8rjwvbqh9s3p1f1sq,imgname-----------------------2026-08-12t142816.307-1786525442504.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಳ್ಳಾರಿ: ಬಳ್ಳಾರಿ ಬಿಜೆಪಿ ನಾಯಕರು ವಿನಾಕಾರಣ ಟೀಕೆ ಮಾಡ್ತದಿದ್ದಾರೆ. ವಾಲ್ಮೀಕಿ ಪ್ರಕರಣದಲ್ಲಿ ಎಸ್&zwnj;ಐಟಿ ಕ್ಲೀನ್&zwnj;ಚಿಟ್ ನೀಡಿದೆ ಅದದ್ರೆ ಇಡಿ, ಸಿಬಿಐನವರು ಬಿಜೆಪಿ ದುರ್ಬಳಕೆ ಮಾಡ್ಕೊಂಡು ವಿನಾಕಾರಣ ಆರೋಪ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಬಿ ನಾಗೇಂದ್ರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;ಬಳ್ಳಾರಿ ಬಿಜೆಪಿ ನಾಯಕರ ಮೇಲೆ ಕೇಸ್ ಇಲ್ವಾ?&lt;/h2&gt;&lt;p&gt;ಇಂದು ವಾಲ್ಮೀಕಿ ಹಗರಣ ಆರೋಪ ಕುರಿತಂತೆ ನಾಗೇಂದ್ರ ಬೆಂಬಲಿಗರು, ವಾಲ್ಮೀಕಿ ಸಂಘ ಜಿಲ್ಲಾಧ್ಯಕ್ಷ ರಾಮಪ್ರಸಾದ್ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಶ್ರೀರಾಮುಲು, ಜನಾರ್ದನ ರೆಡ್ಡಿ ಮೇಲೆ ಕೇಸ್ ಇಲ್ವಾ? ಎಂದು ಪ್ರಶ್ನಿಸಿದ ಬೆಂಬಲಿಗರು ದಲಿತ ಯುವಕನೊಬ್ಬ ಬೆಳೆಯುತ್ತಿರೋದು ಸಹಿಸೋಕೆ ಅಗ್ತಿಲ್ಲ. ಚುನಾವಣೆಗಳಲ್ಲಿ ಸೋತು ಹೋಗಿರೋ ಬಿಜೆಪಿ ನಾಯಕರು ಏನು ಮಾಡೋಕೆ ಅಗ್ತಿಲ್ಲ.. ಶ್ರೀರಾಮುಲು ಎರಡು ಬಾರಿ ಸೋತು ಹತಾಶರಾಗಿ ಏನೇನೋ ಮಾತಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h3&gt;ನಾಗೇಂದ್ರ ಆರೋಪಿ ಹೊರತು ಅಪರಾಧಿ ಅಲ್ಲ:&lt;/h3&gt;&lt;p&gt;ವಾಲ್ಮೀಕಿ ನಿಗಮ ಹಗರಣ ಸಂಬಂಧ ಬಿ ನಾಗೇಂದ್ರ ಅವರ ಮೇಲೆ ಆರೋಪಗಳಿವೆ. ಆದರೆ ಅವರು ಅಪರಾಧಿ ಅಲ್ಲ. ನಮ್ಮ ನಾಯಕರು ನ್ಯಾಯಾಲಯದ ತಿರ್ಮಾನಕ್ಕೆ ಬದ್ಧರಾಗಿರುತ್ತಾರೆ. ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟದ ಎಲ್ಲಾ ನಾಯಕರು ನಾಗೇಂದ್ರ ಅವರ ಪರವಾಗಿದ್ದಾರೆ ಎಂದರು.&lt;/p&gt;&lt;h3&gt;ಬಿಜೆಪಿ ನಾಯಕರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ&lt;/h3&gt;&lt;p&gt;ಬಳ್ಳಾರಿ ಜಿಲ್ಲೆಯ ಬಿಜೆಪಿಯ ಎಲ್ಲ ನಾಯಕರ ಮೇಲೆ ಯಾವ್ಯಾವ ಆರೋಪಗಳಿವೆ ಎಂಬುದು ಜಗತ್ತಿಗೆ ಗೊತ್ತಿದೆ. ಯಡಿಯೂರಪ್ಪ, ಕುಮಾರಸ್ವಾಮಿ, ಅಮಿತ್ ಶಾ, ಜನಾರ್ದನರೆಡ್ಡಿ, ಶ್ರೀರಾಮುಲು ಈ ಎಲ್ಲ ಮುಖಂಡರ ಮೇಲೆ ಕೇಸ್&zwnj;ಗಳಿಲ್ವ? ಇದು ನಾಗೇಂದ್ರ ಅವರನ್ನು ಸಮರ್ಥಿಸಿ ಈ ಮಾತು ಹೇಳುತ್ತಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ ತೀರ್ಪು ಏನೇ ಬರಲಿ ನ್ಯಾಯಾಲಯದ ತೀರ್ಮಾನಕ್ಕೆ ನಮ್ಮ ನಾಯಕರು ಬದ್ಧರಾಗಿರುತ್ತಾರೆ. ಆದರೆ ಬಿಜೆಪಿ ನಾಯಕರು ಸುಖಾಸುಮ್ಮನೆ ಆರೋಪ ಮಾಡಿದಾರೆ ನಾವು ಇನ್ಮುಂದೆ ಸುಮ್ಮನೆ ಇರೋಕಾಗಲ್ಲ. ಬಿಜೆಪಿ ನಾಯಕರ ವಿರುದ್ಧ ಕಾನೂನು ಹೋರಾಟ ಮಾಡ್ತೇವೆ ಎಚ್ಚರಿಸಿದರು. ಈಗ ಬಿ ನಾಗೇಂದ್ರರಿಗೆ ಸಚಿವ ಸ್ಥಾನ ನೀಡಿದರೆ ಬಿಜೆಪಿ ನಾಯಕರು ಹೋರಾಟ ಮಾಡುವುದಾಗಿ ಹೇಳಿದ್ದಾರೆ. ನಾವು ಬಿಜೆಪಿ ಹೋರಾಟಕ್ಕೆ ಪ್ರತ್ಯುತ್ತರ ನೀಡುತ್ತೇವೆ ಎಂದು ನಾಗೇಂದ್ರ ಪರ ವಾಲ್ಮೀಕಿ ಮುಖಂಡರು ಸವಾಲು ಹಾಕಿದರು.&lt;/p&gt;&lt;p&gt;ಸದ್ಯ ಈ ಬಿ ನಾಗೇಂದ್ರ ಬಿಜೆಪಿ ನಾಯಕರ ನಡುವಿನ ಈ ಬೆಳವಣಿಗೆ ಬಳ್ಳಾರಿ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಬಿ ನಾಗೇಂದ್ರಗೆ ಸಚಿವ ಸ್ಥಾನ ಸಿಗುತ್ತಾ? ಬಿಜೆಪಿ ನಾಯಕರ ಹೋರಾಟ ತೀವ್ರಗೊಳ್ಳುತ್ತಾ ಕಾದು ನೋಡಬೇಕು.&lt;/p&gt;]]></content:encoded>
            <category>ballari</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/valmiki-corporation-scam-b-nagendra-supporters-press-conference-at-ballari-rav/articleshow-eq7ol7b"/>
        </item>
        <item>
            <title><![CDATA[Ballari Politics:  ಮತ್ತೆ ರಾಜ್ಯದ ಗಮನ ಸೆಳೆದ ಬಳ್ಳಾರಿ ರಾಜಕೀಯ; ಬಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮೇಲ್ಮನೆ, ಕೆಳಮನೆಯಲ್ಲೂ ಗದ್ದಲ!]]></title>
            <link>https://kannada.asianetnews.com/politics/valmiki-corporation-scam-bjp-protest-and-demandig-b-nagendra-resignation-rav/articleshow-foqii86</link>
            <guid isPermaLink="true">https://kannada.asianetnews.com/politics/valmiki-corporation-scam-bjp-protest-and-demandig-b-nagendra-resignation-rav/articleshow-foqii86</guid>
            <pubDate>Fri, 21 Aug 2026 11:53:43 +0530</pubDate>
            <description><![CDATA[&lt;p&gt;ಬಳ್ಳಾರಿ ರಾಜಕಾರಣವು ಗಣಿ ವಿವಾದಗಳಿಂದ ಹಿಡಿದು ಸಚಿವ ನಾಗೇಂದ್ರರ ರಾಜೀನಾಮೆ ಒತ್ತಾಯದವರೆಗೆ ಸದಾ ವಿವಾದಗಳ ಕೇಂದ್ರವಾಗಿದೆ. ರೆಡ್ಡಿ ಸಹೋದರರ ಪ್ರಭಾವ, 'ಆಪರೇಷನ್ ಕಮಲ', ವಾಲ್ಮೀಕಿ ನಿಗಮದ ಹಗರಣದಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಬಳ್ಳಾರಿಯನ್ನು ಪ್ರಮುಖ ಹಾಗೂ ವಿವಾದಾತ್ಮಕ ಶಕ್ತಿಕೇಂದ್ರವಾಗಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0hf9z9sjcvb8mjrs3csfkmk,imgname-----------------------2026-08-21t114133.033-1787292876089.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;ಬಳ್ಳಾರಿ: ಒಂದಿಲ್ಲೊಂದು ವಿವಾದಗಳಿಗೆ ಸದಾ ಸುದ್ದಿಯಲ್ಲಿರುವ ಬಳ್ಳಾರಿ ರಾಜಕಾರಣ ಇದೀಗ ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಾಯಿಸಿ ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ನಡೆಯುತ್ತಿರುವ ಹೋರಾಟದಿಂದ ಮತ್ತೊಮ್ಮೆ ಸುದ್ದಿಯಲ್ಲಿದೆ.&lt;/p&gt;&lt;p&gt;ರಾಜ್ಯ ರಾಜಕಾರಣದ ಮೇಲೆ ತನ್ನದೇ ಆದ ಪ್ರಭಾವ ಬೀರಿರುವ ಬಳ್ಳಾರಿ, ಕಳೆದ ಎರಡು ದಶಕಗಳಿಂದ ಹಲವು ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದು, ಇದೀಗ ಸಚಿವ ಬಿ. ನಾಗೇಂದ್ರ ಅವರ ರಾಜಿನಾಮೆ ಪ್ರಹಸನ ಬಳ್ಳಾರಿಯ ರಾಜಕೀಯ ರಾಜ್ಯಮಟ್ಟದ ಚರ್ಚೆಗೆ ಮುನ್ನೆಲೆಗೆ ಬಂದಿದೆ.&lt;/p&gt;&lt;h2&gt;ಅಂದು ರೆಡ್ಡಿ ಸಹೋದರರು, ಇಂದು ನಾಗೇಂದ್ರ&lt;/h2&gt;&lt;p&gt;ಒಂದು ಕಾಲದಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರ ಅಕ್ರಮ ಗಣಿಗಾರಿಕೆ ಆರೋಪಗಳು ಬಳ್ಳಾರಿಯನ್ನು ದೇಶದ ಗಮನ ಸೆಳೆಯುವಂತೆ ಮಾಡಿದ್ದವು. 2010ರ ಅವಧಿಯಲ್ಲಿ ಈ ವಿಚಾರ ವಿಧಾನಸಭೆ ಹಾಗೂ ವಿಧಾನಪರಿಷತ್&zwnj;ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಆರೋಪ-ಪ್ರತ್ಯಾರೋಪ, ಮಾತಿನ ಚಕಮಕಿ ಹಾಗೂ ಬಳ್ಳಾರಿಯ ಬಿಜೆಪಿ ಶಾಸಕರ ವರ್ತನೆ ಕುರಿತು ನಡೆದ ರಾಜಕೀಯ ವಿಶ್ಲೇಷಣೆಗಳು ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದವು. ಅದೇ ಸಂದರ್ಭದಲ್ಲಿ ಸವಾಲೊಂದನ್ನು ಸ್ವೀಕರಿಸಿದ್ದ ಅಂದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ನಡೆಸುವ ಮೂಲಕ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದ್ದರು. ಅಷ್ಟೇ ಅಲ್ಲ; ಬಳ್ಳಾರಿ ಪಾದಯಾತ್ರೆಯಿಂದಾಗಿಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯೂ ಆದರು. ಆಗ ರಾಜ್ಯ ರಾಜಕಾರಣದಲ್ಲಿ ಬಳ್ಳಾರಿ ಕೇಂದ್ರಬಿಂದುವಾಗಿ ಗುರುತಿಸಿಕೊಂಡಿತ್ತು.&lt;/p&gt;&lt;p&gt;ಇದಕ್ಕೂ ಮುನ್ನವೇ ಬಳ್ಳಾರಿಯ ರೆಡ್ಡಿ ಸಹೋದರರ ರಾಜಕೀಯ ಪ್ರಭಾವ ರಾಜ್ಯದಲ್ಲಿ ಚರ್ಚಿತವಾಗಿತ್ತು. &lsquo;ಆಪರೇಷನ್ ಕಮಲ&rsquo;ದ ಬೆಳವಣಿಗೆಗಳೊಂದಿಗೆ ರೆಡ್ಡಿ ಸಹೋದರರ ಹೆಸರು ಮುನ್ನೆಲೆಗೆ ಬಂದಿತ್ತು. ಸರ್ಕಾರ ರಚನೆ ಹಾಗೂ ಅಧಿಕಾರದ ರಾಜಕೀಯದಲ್ಲಿ ಬಳ್ಳಾರಿಯ ಪಾತ್ರದ ಕುರಿತು ರಾಜ್ಯದಾದ್ಯಂತ ಚರ್ಚೆ ನಡೆದಿತ್ತು. ಇದರಿಂದ ಜಿಲ್ಲೆ ಕೇವಲ ಗಣಿಗಾರಿಕೆಯ ಕಾರಣಕ್ಕಷ್ಟೇ ಅಲ್ಲ, ರಾಜಕೀಯ ಶಕ್ತಿಕೇಂದ್ರವಾಗಿಯೂ ಗುರುತಿಸಿಕೊಂಡಿತು.&lt;/p&gt;&lt;h3&gt;ಬಳ್ಳಾರಿ ರಾಜಕಾರಣ ಮತ್ತೊಂದು ಮಹತ್ವದ ಪ್ರಕರಣಕ್ಕೆ ಸಾಕ್ಷಿ&lt;/h3&gt;&lt;p&gt;ಮುಂದಿನ ವರ್ಷಗಳಲ್ಲಿ ಬಳ್ಳಾರಿ ರಾಜಕಾರಣ ಮತ್ತೊಂದು ಮಹತ್ವದ ಪ್ರಕರಣಕ್ಕೆ ಸಾಕ್ಷಿಯಾಯಿತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೂರಾರು ಕೋಟಿ ರುಪಾಯಿ ಮೌಲ್ಯದ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿತು. ಪ್ರಕರಣದ ರಾಜಕೀಯ ಪರಿಣಾಮವಾಗಿ ಅಂದಿನ ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕಾಯಿತು. ಪ್ರಕರಣ ರಾಜ್ಯದಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಯಿತು.&lt;/p&gt;&lt;p&gt;ಇದೀಗ ಅದೇ ಬಿ. ನಾಗೇಂದ್ರ ಅವರು ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಮ್ಮೆ ಅವರ ವಿರುದ್ಧ ರಾಜಕೀಯ ಸಮರಕ್ಕೆ ಮುಂದಾಗಿದೆ. ನಾಗೇಂದ್ರ ಅವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಸದನದ ಒಳಗೂ ಹೊರಗೂ ಪ್ರತಿಭಟನೆ, ಹೋರಾಟ ನಡೆಸುತ್ತಿದೆ. ಪರಿಣಾಮವಾಗಿ ಬಳ್ಳಾರಿಯ ರಾಜಕೀಯ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಬಳ್ಳಾರಿಯ ಜನರ ಬಗ್ಗೆ ರಾಜ್ಯದ ಜನರು ನಾನಾ ಬಗೆಯಲ್ಲಿ ವಿಶ್ಲೇಷಿಸುವಂತಾಗಿದೆ.&lt;/p&gt;&lt;p&gt;ಇದರ ನಡುವೆ 2026ರ ಜನವರಿ 1ರಂದು ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಹಾಗೂ ಓರ್ವ ವ್ಯಕ್ತಿಯ ಸಾವಿನ ಪ್ರಕರಣವೂ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ವಾತಾವರಣದ ಕುರಿತು ರಾಜ್ಯದ ಗಮನ ಸೆಳೆಯಿತು. ಈ ಘಟನೆ ಬಳ್ಳಾರಿಯ ರಾಜಕೀಯ ವೈಖರಿ ಹಾಗೂ ಇಲ್ಲಿನ ಜನಜೀವನದ ಕುರಿತು ಹಲವು ಚರ್ಚೆಗಳಿಗೆ ಕಾರಣವಾಯಿತು.&lt;/p&gt;&lt;p&gt;ಗಣಿಗಾರಿಕೆ ವಿವಾದದಿಂದ ಆರಂಭಿಸಿ &lsquo;ಆಪರೇಷನ್ ಕಮಲ&rsquo;, ಸಚಿವರ ರಾಜಿನಾಮೆ, ಭ್ರಷ್ಟಾಚಾರ ಆರೋಪ, ರಾಜಕೀಯ ಸಂಘರ್ಷ ಹಾಗೂ ಇತ್ತೀಚಿನ ಘಟನೆಗಳ ವರೆಗೆ ಬಳ್ಳಾರಿ ಒಂದಲ್ಲ ಒಂದು ಕಾರಣಕ್ಕೆ ರಾಜ್ಯದ ರಾಜಕೀಯ ನಕ್ಷೆಯಲ್ಲಿ ತನ್ನ ಛಾಪು ಮೂಡಿಸುತ್ತಲೇ ಬಂದಿದೆ. ಅಧಿಕಾರದ ಆಟದಲ್ಲಿ ಬಳ್ಳಾರಿಯ ಪ್ರಭಾವ ಕಡಿಮೆಯಾಗಿಲ್ಲ ಎಂಬುದಕ್ಕೆ ಇತ್ತೀಚಿನ ಬೆಳವಣಿಗೆಗಳೇ ಸಾಕ್ಷಿಯಾಗಿದ್ದು, ರಾಜಕೀಯ ವಿವಾದಗಳ ಜಿಲ್ಲೆ ಎಂಬ ಕುಖ್ಯಾತಿಗೂ ಬಳ್ಳಾರಿ ಒಳಗಾಗಿರುವುದು ಈ ಭಾಗದ ಜನರ ಬೇಸರಕ್ಕೂ ಕಾರಣವಾಗಿಸಿದೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/valmiki-corporation-scam-bjp-protest-and-demandig-b-nagendra-resignation-rav/articleshow-foqii86"/>
        </item>
        <item>
            <title><![CDATA[TB Dam: ರೈತರಿಗೆ ಶುಭ ಸುದ್ದಿ, ತುಂಗಭದ್ರೆಗೆ ಒಳಹರಿವು ಹೆಚ್ಚಳ! ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟು?]]></title>
            <link>https://kannada.asianetnews.com/karnataka-districts/tungabhadra-water-inflow-increase-what-is-the-reservoirs-water-level-today-rav/articleshow-htwnv7c</link>
            <guid isPermaLink="true">https://kannada.asianetnews.com/karnataka-districts/tungabhadra-water-inflow-increase-what-is-the-reservoirs-water-level-today-rav/articleshow-htwnv7c</guid>
            <pubDate>Wed, 08 Jul 2026 08:43:19 +0530</pubDate>
            <description><![CDATA[ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಸೊರಗಿದ್ದ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮುಂಗಾರು ಬೆಳೆ ಕೈತಪ್ಪುವ ಭೀತಿಯಲ್ಲಿದ್ದ ಬಳ್ಳಾರಿ, ಕೊಪ್ಪಳ, ರಾಯಚೂರು ಭಾಗದ ರೈತರಲ್ಲಿ ಹೊಸ ಭರವಸೆ ಮೂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwztj8027kn10ge23zrxtwcr,imgname-----------------------2026-07-08t082726.529-1783479476226.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;&lt;strong&gt;ಬಳ್ಳಾರಿ (ಜು.8):&lt;/strong&gt; ನೀರಿನ ಕೊರತೆಯಿಂದ ಸೊರಗಿದ್ದ ತುಂಗಭದ್ರಾ ಜಲಾಶಯ(Tungabhadra Reservoir)ಕ್ಕೆ ಕಳೆದ ಎರಡು ದಿನಗಳಿಂದ ಒಳಹರಿವು ಹೆಚ್ಚಿದ್ದು, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ತುಂಗಭದ್ರಾ ಎಡ ಹಾಗೂ ಬಲದಂಡೆ ಕಾಲುವೆಗಳನ್ನು ಅವಲಂಬಿಸಿರುವ ಲಕ್ಷಾಂತರ ರೈತರಲ್ಲಿ ಹೊಸ ಆಶಾಕಿರಣ ಮೂಡಿಸಿದೆ.&lt;/p&gt;&lt;p&gt;ಈ ಬಾರಿ ಮುಂಗಾರು ಹಂಗಾಮಿನ ಬೆಳೆ ಕೈತಪ್ಪುವ ಭೀತಿ ಎದುರಿಸುತ್ತಿದ್ದ ರೈತರು ಈಗ ಜಲಾಶಯ ಭರ್ತಿಯಾಗಿ ಕಾಲುವೆಗಳಿಗೆ ನೀರು ಹರಿಯುವ ವಿಶ್ವಾಸದಲ್ಲಿದ್ದಾರೆ.&lt;/p&gt;&lt;p&gt;ಕಳೆದ ಕೆಲವು ವಾರಗಳಿಂದ ಜಲಾಶಯದ ನೀರಿನ ಮಟ್ಟ ಕುಸಿದಿದ್ದರಿಂದ ಭತ್ತ, ಮೆಕ್ಕೆಜೋಳ, ಹತ್ತಿ ಹಾಗೂ ಇತರೆ ಮುಂಗಾರು ಬೆಳೆಗಳ ಬಿತ್ತನೆಗೆ ರೈತರು ಆತಂಕದಲ್ಲಿದ್ದರು. ಜಮೀನು ಹದಗೊಳಿಸುವುದು, ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದರೂ ನೀರಿನ ಅಭಾವದಿಂದ ಕೃಷಿ ಚಟುವಟಿಕೆ ಆರಂಭಿಸುವಲ್ಲಿ ಹಿಂಜರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಭತ್ತ ಹಾಗೂ ಒಣ ಮೆಣಸಿನಕಾಯಿ ಬೆಳೆಗಾರರು ಜಲಾಶಯದ ಕಾಲುವೆ ನೀರನ್ನೇ ಅವಲಂಬಿಸಿದ್ದು, ಈ ಬಾರಿ ಮಳೆ ತೀವ್ರ ಅಭಾವದಿಂದ ಮುಂಗಾರು ಬೆಳೆ ಕೈ ಕೊಟ್ಟಿತು ಎಂದೇ ಭಾವಿಸಿದ್ದರು. ಆದರೆ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.&lt;/p&gt;&lt;p&gt;ಬಳ್ಳಾರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ತುಂತುರು ಮಳೆ ಸುರಿಯುತ್ತಿರುವುದು ರೈತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಇದೇ ರೀತಿ ಮಳೆ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಲಿದೆ. ಶೀಘ್ರದಲ್ಲೇ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಕಳೆದ ಎರಡು ದಿನಗಳಿಂದ ಗಣಿ ಜಿಲ್ಲೆಯ ಬಳ್ಳಾರಿಯಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ.&lt;/p&gt;&lt;p&gt;ತುಂಗಭದ್ರಾ ಜಲಾಶಯದ ನೀರನ್ನೇ ಅವಲಂಬಿಸಿರುವ ಕೃಷಿ ಪ್ರದೇಶಗಳಲ್ಲಿ ಈಗ ರೈತರು ಪ್ರತಿದಿನ ಜಲಾಶಯದ ನೀರಿನ ಮಟ್ಟ ಹಾಗೂ ಮಲೆನಾಡಿನ ಮಳೆಯ ಮಾಹಿತಿಯನ್ನು ಕಾತರದಿಂದ ಗಮನಿಸುತ್ತಿದ್ದಾರೆ. ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಮುಂದುವರಿದರೆ ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಕೃಷಿ ಆರ್ಥಿಕತೆಗೆ ಹೊಸ ಚೈತನ್ಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ.&lt;/p&gt;&lt;p&gt;ಆದ್ಯಾಗೂ ಕೇವಲ ಆರಂಭಿಕ ಮಳೆಯ ಆಧಾರದಲ್ಲಿ ನಿರಾಳರಾಗಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಮಲೆನಾಡಿನಲ್ಲಿ ನಿರಂತರವಾಗಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯ ಸಮರ್ಪಕವಾಗಿ ಭರ್ತಿಯಾಗಿ, ಸಂಪೂರ್ಣ ಮುಂಗಾರು ಹಂಗಾಮಿಗೆ ನೀರಿನ ಭದ್ರತೆ ಒದಗಿಸಲು ಸಾಧ್ಯವಾಗುತ್ತದೆ. ಹೀಗಾಗಿ ರೈತರ ಕಣ್ಣು ಈಗ ಆಕಾಶದತ್ತ ಮಾತ್ರವಲ್ಲ, ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯತ್ತ ನೆಟ್ಟಿದೆ.&lt;/p&gt;&lt;p&gt;ಕಳೆದ ವರ್ಷ ಜಲಾಶಯದ ನೀರಿನ ಒಳಹರಿವು ಹಾಗೂ ಸದ್ಯದ ನೀರಿನ ಒಳಹರಿವು ಪ್ರಮಾಣ ಹೋಲಿಸಿದರೆ ಭಾರೀ ಪ್ರಮಾಣದ ವ್ಯತ್ಯಾಸವಿದೆ. ಇನ್ನು ಐದಾರು ದಿನ ಮಲೆನಾಡಿನಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯ ಭರ್ತಿಯಾಗಿ ಬೆಳೆಗಳಿಗೆ ನೀರು ದಕ್ಕುವ ಸಾಧ್ಯತೆಯಿದೆ. ಇಲ್ಲದೇ ಹೋದರೆ ಈ ಬಾರಿ ಮುಂಗಾರು ಹಂಗಾಮಿನ ಬೆಳೆಯಿಂದ ರೈತರು ವಂಚಿತರಾಗುವ ಆಸ್ಪದವಿದೆ ಎಂದು ರೈತ ಸಂಘಟನೆಗಳ ಮುಖಂಡರು ಹೇಳುತ್ತಾರೆ.&lt;/p&gt;&lt;p&gt;ಜುಲೈ1 ರಿಂದ 4ರವರೆಗೆ ಜಿಲ್ಲೆಯಲ್ಲಿ ಸಾಮಾನ್ಯ 150.8 ಮಿ.ಮೀ. ಮಳೆಯಾಗಬೇಕಿತ್ತು. 142 ಮಿ.ಮೀ. ಮಳೆಯಾಗಿದೆ. ಜುಲೈ 5 ಮತ್ತು 6ರಂದು ಜಿಲ್ಲೆಯ ವಿವಿಧೆಡೆ ಸಾಮಾನ್ಯ ಮಳೆಯಾಗಿರುವುದರಿಂದ ಬಿತ್ತನೆಗೆ ಭೂಮಿ ಹದಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.&lt;/p&gt;&lt;p&gt;ಈ ಹಿಂದೆ ಜಲಾಶಯದಲ್ಲಿ 14 ಟಿಎಂಸಿ ಸಂಗ್ರಹವಾಗುತ್ತಿದ್ದಂತೆಯೇ ರೈತರ ಬೆಳೆಗಳಿಗೆ ನೀರು ಬಿಡಲಾಗುತ್ತಿತ್ತು. ಆದರೆ, ಕೈಗಾರಿಕೆಗಳಿಗೆ ನೀರು ಒದಗಿಸಲು ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಜಲಾಶಯಕ್ಕೆ ಕನಿಷ್ಠ 65 ಟಿಎಂಸಿ ಸಂಗ್ರಹವಾದರೆ ಮಾತ್ರ ಕಾಲುವೆಗಳಿಗೆ ನೀರು ಬಿಡಲಿದ್ದಾರೆ. ಕಳೆದ ವರ್ಷ 80 ಟಿಎಂಸಿ ಆಗುವವರೆಗೆ ನೀರು ಹರಿಸಲಿಲ್ಲ. ಮಲೆನಾಡಿನ ಮಳೆಯ ಮೇಲೆ ರೈತರ ಬೆಳೆಯ ಅಳಿವು-ಉಳಿವು ನಿಂತಿದೆ ಎನ್ನುತ್ತಾರೆ ರಾಜ್ಯರೈತ ಸಂಘದ ರಾಜ್ಯಾಧ್ಯಕ್ಷ ಮಾಧವರೆಡ್ಡಿ ಕರೂರು.&lt;/p&gt;&lt;p&gt;ನೀರಿನ&zwnj;ಮಟ್ಟ:&lt;/p&gt;&lt;p&gt;ಗರಿಷ್ಠ ನೀರಿನ ಮಟ್ಟ: 1,633 ಅಡಿಇಂದಿನ ಮಟ್ಟ: 1,588.37 ಅಡಿಒಟ್ಟು ಸಾಮರ್ಥ್ಯ: 105.788 ಟಿಎಂಸಿಇಂದಿನ ನೀರಿನ ಮಟ್ಟ: 9.72 ಟಿಎಂಸಿಕಳೆದ ವರ್ಷದ ನೀರಿನ ಮಟ್ಟ: 76.71 ಟಿಎಂಸಿಈ ವರ್ಷದ ಒಟ್ಟು ಸಂಗ್ರಹ: 0.52 ಟಿಎಂಸಿಕಳೆದ ವರ್ಷದ ಒಟ್ಟು ಸಂಗ್ರಹ: 75.34 ಟಿಎಂಸಿಇಂದಿನ ಒಳಹರಿವು: 4,188 ಕ್ಯುಸೆಕ್ಕಳೆದ ವರ್ಷದ ಒಳಹರಿವು: 54,550 ಕ್ಯುಸೆಕ್ಇಂದಿನ ಹೊರಹರಿವು: 140 ಕ್ಯುಸೆಕ್&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tungabhadra-water-inflow-increase-what-is-the-reservoirs-water-level-today-rav/articleshow-htwnv7c"/>
        </item>
        <item>
            <title><![CDATA[ಬಾಕಿ ವಸೂಲಿಯಾಗದಿದ್ದರೂ KSMCL ಕಂಪನಿಗೆ ಜಾಕ್‌ಪಾಟ್: ಬಳ್ಳಾರಿಯಲ್ಲಿ 47 ಎಕರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರದ ಗ್ರೀನ್ ಸಿಗ್ನಲ್!]]></title>
            <link>https://kannada.asianetnews.com/karnataka-districts/ksmcl-gets-approval-for-47-acres-forest-diversion-in-ballari-despite-fdt-dues-san/articleshow-kei5ecw</link>
            <guid isPermaLink="true">https://kannada.asianetnews.com/karnataka-districts/ksmcl-gets-approval-for-47-acres-forest-diversion-in-ballari-despite-fdt-dues-san/articleshow-kei5ecw</guid>
            <pubDate>Mon, 27 Jul 2026 18:13:22 +0530</pubDate>
            <description><![CDATA[&lt;p&gt;ರಾಜ್ಯ ಸರ್ಕಾರದ KSMCL ಸಂಸ್ಥೆಯು ₹136 ಕೋಟಿಗೂ ಅಧಿಕ ಅರಣ್ಯ ಅಭಿವೃದ್ಧಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದರೂ, ಬಳ್ಳಾರಿಯಲ್ಲಿ ಕನ್ವೇಯರ್ ಬೆಲ್ಟ್ ನಿರ್ಮಾಣಕ್ಕೆ 47 ಎಕರೆ ಅರಣ್ಯ ಭೂಮಿ ಬಳಸಲು ಕೇಂದ್ರ ಪರಿಸರ ಸಚಿವಾಲಯದಿಂದ ಅನುಮೋದನೆ ಪಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyhsdzgc636n4254fax54j1e,imgname-ksmcl-1785156009484.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜು.27): &lt;/strong&gt;ರಾಜ್ಯ ಸರ್ಕಾರದ ಒಡೆತನದ 'ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ' (KSMCL) ಸಂಸ್ಥೆಯು ಕಳೆದ 25 ವರ್ಷಗಳಿಂದ ಅರಣ್ಯ ಅಭಿವೃದ್ಧಿ ತೆರಿಗೆ (FDT) ರೂಪದಲ್ಲಿ ಪಾವತಿಸಬೇಕಿದ್ದ ಬರೋಬ್ಬರಿ ₹136 ಕೋಟಿಯಿಂದ ₹350 ಕೋಟಿವರೆಗಿನ ಬಾಕಿ ಮೊತ್ತವನ್ನು ಪಾವತಿಸದಿದ್ದರೂ, ಬಳ್ಳಾರಿ ಜಿಲ್ಲೆಯ ಸಂಶೋಧಿತ ಅರಣ್ಯ ಪ್ರದೇಶದಲ್ಲಿ 47 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಇತರ ಉದ್ದೇಶಕ್ಕೆ ಬಳಸಲು ಕೇಂದ್ರ ಪರಿಸರ ಸಚಿವಾಲಯವು ಅನುಮೋದನೆ ನೀಡಿದೆ.&lt;/p&gt;&lt;p&gt;ತನ್ನ 1,536 ಎಕರೆ ವಿಸ್ತೀರ್ಣದ ಕಬ್ಬಿಣದ ಅದಿರು ಗಣಿಯಿಂದ ಅದಿರನ್ನು ಸಾಗಿಸಲು ಕನ್ವೇಯರ್ ಬೆಲ್ಟ್ (Conveyor Belt) ನಿರ್ಮಿಸುವ ಸಲುವಾಗಿ, ಕೆಎಸ್&zwnj;ಎಂಸಿಎಲ್ ಸಂಸ್ಥೆಯು 2020 ರಲ್ಲೇ ಅರಣ್ಯ ಭೂಮಿ ಬಳಕೆಗೆ ಪ್ರಸ್ತಾಪವನ್ನು ಸಲ್ಲಿಸಿತ್ತು. ರಸ್ತೆ ಸಾರಿಗೆಯನ್ನು ತಪ್ಪಿಸುವ ಮೂಲಕ ಕನ್ವೇಯರ್ ಬೆಲ್ಟ್&zwnj;ಗಳು ಮಾಲಿನ್ಯವನ್ನು ಕಡಿಮೆ ಮಾಡುತ್ತವೆಯಾದರೂ, 2000-2008 ಮತ್ತು 2008-2013 ರ ಅವಧಿಯಲ್ಲಿ ನಡೆದ ಗಣಿಗಾರಿಕೆ ಮತ್ತು ಅದಿರು ರಫ್ತಿಗೆ ಸಂಬಂಧಿಸಿದಂತೆ ಅರಣ್ಯ ಅಭಿವೃದ್ಧಿ ತೆರಿಗೆಯನ್ನು ಪಾವತಿಸದಿರುವ ಬಗ್ಗೆ ಅರಣ್ಯ ಇಲಾಖೆಯು ಕಳೆದ ನಾಲ್ಕು ವರ್ಷಗಳಿಂದ ನಿರಂತರ ಕಳವಳ ವ್ಯಕ್ತಪಡಿಸುತ್ತಲೇ ಇತ್ತು.&lt;/p&gt;&lt;h2&gt;&lt;strong&gt;ಸುಪ್ರೀಂ ಕೋರ್ಟ್ ಆದೇಶವೇ ಕಂಪನಿಗೆ ವರವಾಯ್ತು&lt;/strong&gt;&lt;/h2&gt;&lt;p&gt;ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ವರ್ಷಕ್ಕೆ ಒಂದು ಮಿಲಿಯನ್ ಟನ್&zwnj;ಗಿಂತಲೂ ಹೆಚ್ಚು ಅದಿರು ತೆಗೆಯುವ ಎಲ್ಲಾ ಗಣಿಗಾರಿಕೆ ಕಂಪನಿಗಳು ಕನ್ವೇಯರ್ ಬೆಲ್ಟ್&zwnj;ಗಳನ್ನು ಬಳಸಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನವೇ ಕೆಎಸ್&zwnj;ಎಂಸಿಎಲ್ ಸಂಸ್ಥೆಗೆ ಬಾಕಿ ಹಣ ಪಾವತಿಸದಿದ್ದರೂ ಅನುಮತಿ ಸಿಗಲು ಪ್ರಮುಖ ಕಾರಣವಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;&quot;ಈ ಪ್ರಸ್ತಾಪವು ಸರ್ವೋಚ್ಚ ನ್ಯಾಯಾಲಯದ ಆದೇಶದ ಪಾಲನೆಯನ್ನು ಒಳಗೊಂಡಿರುವುದರಿಂದ ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ನೆರವಾಗುವುದರಿಂದ, ಪ್ರಸ್ತಾಪಕ್ಕೆ ಅನುಮೋದನೆ ನೀಡುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MoEF&amp;amp;CC) ಶಿಫಾರಸು ಮಾಡಲು ನಿರ್ಧರಿಸಲಾಯಿತು&quot; ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ತೆರವು) ಮಹೇಶ್ ಬಿ. ಶಿರೂರ್ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;₹350 ಕೋಟಿಯಿಂದ ₹135 ಕೋಟಿಗೆ ಇಳಿದ ಬಾಕಿ ಮೊತ್ತ&lt;/strong&gt;&lt;/h2&gt;&lt;p&gt;ಅರಣ್ಯ ಇಲಾಖೆಯು ಸುಮಾರು ಎರಡು ವರ್ಷಗಳ ಹಿಂದೆ ಎಫ್&zwnj;ಡಿಟಿ (FDT) ಬಾಕಿಯನ್ನು ಮೊದಲ ಬಾರಿಗೆ ಲೆಕ್ಕ ಹಾಕಿತ್ತು. ಆಗ ಚಾಲ್ತಿಯಲ್ಲಿದ್ದ ಬೆಂಚ್&zwnj;ಮಾರ್ಕ್ ದರಗಳ ಆಧಾರದ ಮೇಲೆ, ಕೆಎಸ್&zwnj;ಎಂಸಿಎಲ್ ₹350.61 ಕೋಟಿ ಬಾಕಿ ಪಾವತಿಸದೇ ಗಣಿಗಾರಿಕೆ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ, ಸರ್ಕಾರದ ನಿರ್ದೇಶನದ ನಂತರ, ಕಂಪನಿಯು ಸಲ್ಲಿಸಿದ ಇನ್&zwnj;ವಾಯ್ಸ್&zwnj;ಗಳನ್ನು ಆಧರಿಸಿ ಇಲಾಖೆಯು ಲೆಕ್ಕಾಚಾರವನ್ನು ಮರುಪರಿಶೀಲಿಸಿತು. ಇದರಿಂದಾಗಿ ಬಾಕಿ ಎಫ್&zwnj;ಡಿಟಿ ಮೊತ್ತವನ್ನು ₹135.94 ಕೋಟಿಗೆ ಪರಿಷ್ಕರಿಸಿ ಇಳಿಸಲಾಯಿತು.&lt;/p&gt;&lt;p&gt;ಹಿಂದೆ 'ಮೈಸೂರು ಮಿನರಲ್ಸ್ ಲಿಮಿಟೆಡ್' (MML) ಎಂದು ಕರೆಯಲ್ಪಡುತ್ತಿದ್ದ ಈ ಕಂಪನಿಯು ದಾಖಲೆಗಳನ್ನು ನಕಲಿ (Fudged Documents) ಮಾಡಿದ ಆರೋಪಗಳನ್ನು ಎದುರಿಸಿತ್ತು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ನೆನಪಿಸಿಕೊಂಡಿದ್ದಾರೆ. &quot;2018 ರಲ್ಲೇ ಕಂಪನಿಯು ದಾಖಲೆಗಳನ್ನು ತಿರುಚಿದ್ದನ್ನು ಸರ್ಕಾರ ಒಪ್ಪಿಕೊಂಡಿತ್ತು. ಆದರೂ ಈ ವರೆಗೆ ಕಂಪನಿಯ ವಿರುದ್ಧ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಗಣಿಗಾರಿಕೆ ಕಾರ್ಯಾಚರಣೆಗೆ ಅವಕಾಶ ನೀಡುವ ಮೊದಲು ಅವರಿಂದ ಬಾಕಿ ಹಣವನ್ನು ಕಡ್ಡಾಯವಾಗಿ ವಸೂಲಿ ಮಾಡಬೇಕಿತ್ತು&quot; ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;ಅರಣ್ಯ ಭೂಮಿ ಬಳಕೆಯ ಪ್ರಸ್ತಾಪವನ್ನು ಸಲ್ಲಿಸುವ ಮುಂಚಿನಿಂದಲೂ ಕಂಪನಿಗೆ ಬಾಕಿ ಹಣ ಪಾವತಿಸುವಂತೆ ಸಾಲು ಸಾಲು ನೋಟಿಸ್&zwnj;ಗಳನ್ನು ನೀಡಲಾಗಿತ್ತು. ಆದರೆ, ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯು (Stay Order) ಸರ್ಕಾರದ ಕೈಗಳನ್ನು ಕಟ್ಟಿಹಾಕಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.&lt;/p&gt;&lt;p&gt;&quot;ಈ ಹಣವು ಅರಣ್ಯ ಅಭಿವೃದ್ಧಿಗೆ ಬಳಸಬೇಕಾದ ನಿಧಿಯಾಗಿದೆ. ಇಲಾಖೆಯ ಅಧಿಕಾರಿಗಳು ಹಲವು ವರ್ಷಗಳಿಂದ ಕಂಪನಿಗೆ ಪತ್ರ ಬರೆಯುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಲಾಖೆ ಮತ್ತು ಕೆಎಸ್&zwnj;ಎಂಸಿಎಲ್ ಜಂಟಿಯಾಗಿ ಪರಿಶೀಲನೆ ನಡೆಸಿದ ನಂತರ ₹139 ಕೋಟಿ ಮೊತ್ತವನ್ನು ನಿಗದಿಪಡಿಸಲಾಗಿತ್ತು. ಹೀಗಾಗಿ ಅನುಮೋದನೆ ಪಡೆಯುವ ಮುನ್ನ ನಿಯಮ ಪಾಲಿಸುವಂತೆ ಅವರಿಗೆ ಸೂಚಿಸಲಾಗಿತ್ತು. ಪ್ರಸ್ತುತ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅರಣ್ಯ ಇಲಾಖೆಯು ಸುಪ್ರೀಂ ಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಿದೆ&quot; ಎಂದು ಮೂಲಗಳು ಸ್ಪಷ್ಟಪಡಿಸಿವೆ.&lt;/p&gt;&lt;p&gt;ಇತ್ತೀಚೆಗೆ ಕೇಂದ್ರ ಪರಿಸರ ಸಚಿವಾಲಯವು ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆಯಾದರೂ, ಕಂಪನಿಯು ಗಣಿಗಳ ವಿಸ್ತರಣೆಗೆ ಹೊಸ ಪ್ರಸ್ತಾಪ ಸಲ್ಲಿಸಿದಾಗ ಈ ಎಫ್&zwnj;ಡಿಟಿ ಬಾಕಿ ಹಣದ ವಿಚಾರವನ್ನು ಕಡ್ಡಾಯವಾಗಿ ಪ್ರಸ್ತಾಪಿಸಲಾಗುವುದು ಎಂದು ಮೂಲಗಳು ಹೇಳಿವೆ.&lt;/p&gt;&lt;p&gt;&lt;/p&gt;]]></content:encoded>
            <category>ballari</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/ksmcl-gets-approval-for-47-acres-forest-diversion-in-ballari-despite-fdt-dues-san/articleshow-kei5ecw"/>
        </item>
        <item>
            <title><![CDATA[ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಅಂತಾ  ರಾಮಾಯಣದ ಮೇಲೆ ನಾಗೇಂದ್ರ  ಪ್ರಮಾಣ ಮಾಡಲಿ: ಶ್ರೀರಾಮುಲು]]></title>
            <link>https://kannada.asianetnews.com/politics/valmiki-corporation-scam-if-nagendra-didnt-corruption-let-swear-on-ramayan-says-sriramulu-rav/articleshow-m0vl2fb</link>
            <guid isPermaLink="true">https://kannada.asianetnews.com/politics/valmiki-corporation-scam-if-nagendra-didnt-corruption-let-swear-on-ramayan-says-sriramulu-rav/articleshow-m0vl2fb</guid>
            <pubDate>Sat, 22 Aug 2026 07:16:10 +0530</pubDate>
            <description><![CDATA[&lt;p&gt;ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ, ಸಚಿವ ಬಿ.ನಾಗೇಂದ್ರ ಅವರು ರಾಮಾಯಣ ಕೃತಿಯ ಮೇಲೆ ಕೈ ಇಟ್ಟು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದ್ದಾರೆ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0khxfsg1mr3a0v1gxpem0vs,imgname-----------------------2026-08-22t070824.567-1787362721584.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22):&lt;/strong&gt; ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಮಾಡಿಲ್ಲ ಎಂಬುದಾಗಿ ಸಚಿವ ಬಿ.ನಾಗೇಂದ್ರ ಅವರು ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯ ಮೇಲೆ ಕೈ ಇಟ್ಟು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಶ್ರೀರಾಮುಲು ಸವಾಲು ಎಸೆದಿದ್ದಾರೆ.&lt;/p&gt;&lt;p&gt;ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ನಾಗೇಂದ್ರ ಯಾವ ಮಟ್ಟಿಗೂ ಹೋಗಬಲ್ಲರು. ರಾಮಾಯಣದ ಮೇಲೂ, ಮಹರ್ಷಿ ವಾಲ್ಮೀಕಿ ಮೇಲೂ ಆಣೆ ಇಡೋದಕ್ಕೂ ಅವರು ಸೈ. ನಾಗೇಂದ್ರ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಯಾವ ರೀತಿ ನಾವು ಹೋರಾಟ ಮಾಡಬೇಕು ಎಂಬ ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.&lt;/p&gt;&lt;p&gt;ಮಾನ ಮರ್ಯಾದೆ ಯಾವುದೂ ಇಲ್ಲದ ಕಾಂಗ್ರೆಸ್ ಪಕ್ಷ ನದಿ ಉಗಮವಾಗಿ ಹರಿಯುವಂತೆ ಭ್ರಷ್ಟಾಚಾರವನ್ನು ನಿರಂತರವಾಗಿ ನಡೆಸುತ್ತಲೇ ಬಂದಿದೆ. ನೆಹರು ಕುಟುಂಬದ ರಾಹುಲ್ ಗಾಂಧಿವರೆಗೆ ಭ್ರಷ್ಟಾಚಾರ ನಡೆಸುತ್ತಲೇ ಇದೆ ಎಂದು ಆಪಾದಿಸಿದರು.&lt;/p&gt;&lt;p&gt;ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ, ಜವಾಹರ ಲಾಲ್ ನೆಹರು ಅವರು ಪ್ರಧಾನಿಯಾದಾಗಿನಿಂದಲೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತಲೇ ಬಂದಿದೆ.&lt;/p&gt;&lt;h2&gt;ಭ್ರಷ್ಟಾಚಾರಕ್ಕೆ ಜಾತಿ ಇಲ್ಲ:&lt;/h2&gt;&lt;p&gt;ದಲಿತನಾದ ಕಾರಣಕ್ಕೆ ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂಬ ಮಾತನ್ನು ಸಚಿವ ನಾಗೇಂದ್ರ ಹೇಳುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಜಾತಿ ಇಲ್ಲ. ಚರಿತ್ರೆ ಹಾಗೂ ಮುಖ ಇಲ್ಲ. ನಿಗಮದ ಮೂಲಕ ಹಲವಾರು ಕಾರ್ಯಕ್ರಮ ಜಾರಿ ಮಾಡಲು ಹಣ ಬಳಸಬೇಕಿತ್ತು. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ನಿಗಮದ ಹಣ ಬಳಸುವ ಬದಲು ಅವರ ಭವಿಷ್ಯವನ್ನೇ ಬಾಡುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ನಿಗಮದ ಹಣ ಕೊಳ್ಳೆ ಹೊಡೆದು ರಾಹುಲ್ ಗಾಂಧಿ ಅವರ ದೆಹಲಿ ಮನೆಗೆ ಕಳುಹಿಸಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸಿದರು. ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರ. ವಾಲ್ಮೀಕಿ ಸಮುದಾಯಕ್ಕೆ ನೋವು ಮಾಡಿದ್ದಾರೆ. ಸರ್ಕಾರದ ಖಜಾನೆಯಲ್ಲಿದ್ದ ಹಣವನ್ನು ಸಾವಿರಾರು ಖಾತೆಗಳಿಗೆ ವರ್ಗಾಯಿಸಿದ್ದಾರೆ. ಐಷಾರಾಮಿ ಕಾರು ಖರೀದಿ, ಚಿನ್ನ ಖರೀದಿ ಮಾಡಿದ್ದಾರೆ. ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದು ಸೇರಿದಂತೆ ಎಲ್ಲವೂ ದಾಖಲೆಯಲ್ಲಿದೆ ಎಂದು ಶ್ರೀರಾಮುಲು ವಿವರಿಸಿದರು.&lt;/p&gt;&lt;h3&gt;ಸಚಿವ ಸ್ಥಾನ ಉಳಿಸಲು ಜಾತಿ ನೆಪ:&lt;/h3&gt;&lt;p&gt;ಆತ್ಮಸಾಕ್ಷಿ ಇದ್ದಿದ್ದರೆ ನಾಗೇಂದ್ರ ಅವರು ಸಚಿವರಾಗಿ ಇರುತ್ತಿರಲಿಲ್ಲ. ಇಷ್ಟೊಂದು ಹಗರಣ ಮಾಡಿ ಹಣ ತಿಂದೂ ಸದನದಲ್ಲಿ ಸಂವಿಧಾನ ಪ್ರತಿ ಹಿಡಿದು ಓಡಾಡುತ್ತಾರೆ. ಬಾಬಾ ಸಾಹೇಬರು ಭ್ರಷ್ಟಾಚಾರಿಗಳನ್ನು ರಕ್ಷಿಸಲು ಸಂವಿಧಾನ ಮಾಡಿಲ್ಲ ಎಂದರು.&lt;/p&gt;&lt;p&gt;ದಲಿತ ಸಮುದಾಯದ ಮಕ್ಕಳ ಭವಿಷ್ಯವನ್ನು ಕಸಿಯವ ವೇಳೆ ನೆನಪಾಗಿಲ್ಲ. ನಾಗೇಂದ್ರ ಅವರಿಗೆ ಆಗ ಜಾತಿ ಕಂಡಿಲ್ಲ. ಸಚಿವ ಸ್ಥಾನ ಉಳಿಸಿಕೊಳ್ಳಲು ಅವರಿಗೆ ಜಾತಿ ನೆನಪಾಗಿದೆ. ವಾಲ್ಮೀಕಿ ಸಮುದಾಯಕ್ಕೆ ಸರ್ಕಾರ ನ್ಯಾಯ ಒದಗಿಸುವುದೇ ಆದರೆ ನಾಗೇಂದ್ರ ಅವರನ್ನು ಕೈಬಿಟ್ಟು ಇದೇ ಸಮುದಾಯದ ಬೇರೆಯವರನ್ನು ಸಚಿವರನ್ನಾಗಿ ನೇಮಿಸಲಿ. ಕಳಂಕಿತ ನಾಗೇಂದ್ರ ಮಾತ್ರ ಸಚಿವರಾಗಿ ಇರಬಾರದು. ಅವರನ್ನು ಕ್ಷಮಿಸಲಾಗದು ಎಂದು ಹೇಳಿದರು.&lt;/p&gt;&lt;p&gt;ಪತ್ರಿಕಾಗೋಷ್ಠಿಯಲ್ಲ ಪಕ್ಷದ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ ರಾಜುಗೌಡ, ಎಸ್&zwnj;ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವ ಶಿವನಗೌಡ ನಾಯಕ ಉಪಸ್ಥಿತರಿದ್ದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/valmiki-corporation-scam-if-nagendra-didnt-corruption-let-swear-on-ramayan-says-sriramulu-rav/articleshow-m0vl2fb"/>
        </item>
        <item>
            <title><![CDATA[Ballari: ನಾಗೇಂದ್ರ ರಾಜೀನಾಮೆ ಕೇಳೋರಿಗೆ ಮರ್ಯಾದೆ ಇದೆಯೇನ್ರಿ? - ಸಚಿವ ಖಂಡ್ರೆ]]></title>
            <link>https://kannada.asianetnews.com/politics/nagendra-s-resignation-politics-minister-eshwar-khandre-salms-sriramulu-and-janardana-reddy-rav/articleshow-os2ilt3</link>
            <guid isPermaLink="true">https://kannada.asianetnews.com/politics/nagendra-s-resignation-politics-minister-eshwar-khandre-salms-sriramulu-and-janardana-reddy-rav/articleshow-os2ilt3</guid>
            <pubDate>Mon, 10 Aug 2026 08:03:08 +0530</pubDate>
            <description><![CDATA[ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಿರುದ್ಧ ಸಚಿವ ಈಶ್ವರ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ರಿಪಬ್ಲಿಕ್ ಆಫ್ ಬಳ್ಳಾರಿ' ಮಾಡಿ ಬಳ್ಳಾರಿಗೆ ಕುಖ್ಯಾತಿ ತಂದವರಿಗೆ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01hn609mh069pn8afcxvh5rps5,imgname-ddbfb.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಆ.10): &lt;/strong&gt;ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಶಾಸಕರಾದ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಗೆ ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಲು ಯಾವ ನೈತಿಕತೆ ಇದೆ? ಬಳ್ಳಾರಿಗೆ ಕುಖ್ಯಾತಿ ತಂದಿರುವ ಅವರಿಗೆ ಮಾನ, ಮರ್ಯಾದೆ ಇದೆಯಾ ಎಂದು ಸಚಿವ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;ರಾಜೀನಾಮೆ ಕೇಳುವ ನೈತಿಕತೆ ಆದ್ರೂ ಇದೆಯಾ?&lt;/h2&gt;&lt;p&gt;ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನೀಡಿದ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಹತಾಶೆಯಿಂದ ಕೆಳಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ. ರಾಜ್ಯದಲ್ಲಿ ಕಾಂಗ್ರೆಸ್&zwnj;ನ ಜನಪ್ರಿಯತೆ ಹೆಚ್ಚಾಗುತ್ತಿದೆ. 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್&zwnj; ಜಯಭೇರಿ ಬಾರಿಸಲಿದೆ. ಇದನ್ನು ಸಹಿಸಲು ಸಾಧ್ಯವಾಗದೆ ರೆಡ್ಡಿ, ಶ್ರೀರಾಮುಲು ಹಾಗೆ ಮಾತನಾಡುತ್ತಿದ್ದಾರೆ. ರಿಪಬ್ಲಿಕ್&zwnj; ಆಫ್&zwnj; ಬಳ್ಳಾರಿ ಮಾಡಿದವರಿಗೆ ರಾಜೀನಾಮೆ ಕೇಳುವ ನೈತಿಕತೆಯಾದರೂ ಎಲ್ಲಿಂದ ಬಂತು ಎಂದು ಕೇಳಿದರು.&lt;/p&gt;&lt;h3&gt;ಶ್ರೀರಾಮುಲು ಕೇಂದ್ರದ ವಿರುದ್ಧ ಮಾತಾಡಲಿ:&lt;/h3&gt;&lt;p&gt;ನಾಗೇಂದ್ರ ಅವರ ರಾಜೀನಾಮೆ ಕೇಳುವ ಶ್ರೀರಾಮುಲು ಹಾಗೂ ಬಿಜೆಪಿಯವರು ಕೇಂದ್ರದಲ್ಲಿ ಪೊಲೀಸರ ದುರ್ಬಳಕೆ, ವಿದ್ಯಾರ್ಥಿಗಳನ್ನು ನಡೆಸಿಕೊಂಡಿರುವ ರೀತಿ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಲಿ. ಕೇಂದ್ರದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಮೊದಲು ಒತ್ತಾಯಿಸಲಿ ಎಂದು ಸವಾಲು ಹಾಕಿದರು.&lt;/p&gt;&lt;p&gt;ರಾಜ್ಯ ಸರ್ಕಾರದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಮಹಿಳೆಯರಿಗೂ ಪ್ರಾತಿನಿಧ್ಯ ನೀಡಲಿದೆ. ಎಲ್ಲರಿಗೂ ಸರಿಸಮನಾಗಿ ಅಧಿಕಾರ ಹಂಚಿಕೆ ಮಾಡಿ, ರಾಜ್ಯದಲ್ಲಿ ಕಾಂಗ್ರೆಸ್&zwnj; ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಖಂಡ್ರೆ ತಿಳಿಸಿದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/nagendra-s-resignation-politics-minister-eshwar-khandre-salms-sriramulu-and-janardana-reddy-rav/articleshow-os2ilt3"/>
        </item>
        <item>
            <title><![CDATA[ಕಾಪಾಡಿ, ಕಾಪಾಡಿ ಎಂದು ಕಂಬದ ಮೇಲೆಯೇ ಪ್ರಾಣಬಿಟ್ಟ ಕಾರ್ಮಿಕ ; ಹೃದಯ ವಿದ್ರಾವಕ ಘಟನೆ]]></title>
            <link>https://kannada.asianetnews.com/ballari/heart-touching-incident-in-ballari-worker-died-on-electric-poll-due-to-power-shocked/articleshow-t5p330n</link>
            <guid isPermaLink="true">https://kannada.asianetnews.com/ballari/heart-touching-incident-in-ballari-worker-died-on-electric-poll-due-to-power-shocked/articleshow-t5p330n</guid>
            <pubDate>Thu, 09 Jul 2026 12:05:55 +0530</pubDate>
            <description><![CDATA[&lt;p&gt;ಬಳ್ಳಾರಿಯ ಸಂಗನಕಲ್ ಗ್ರಾಮದ ಬಳಿ, ಜೆಸ್ಕಾಂ ಅಧಿಕಾರಿಗಳು ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಹುಲಗಪ್ಪ ಎಂಬ 22 ವರ್ಷದ ಯುವಕ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ. ಸುರಕ್ಷತಾ ಕ್ರಮಗಳಿಲ್ಲದೆ, ಲೈನ್ ಕ್ಲಿಯರೆನ್ಸ್ ಪಡೆಯದೆ ಕಂಬ ಹತ್ತಿಸಿದ್ದರಿಂದ, ಆತ ಸುಮಾರು 15 ನಿಮಿಷಗಳ ಕಾಲ ನರಳಾಡಿ ಪ್ರಾಣ ಬಿಟ್ಟಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx2s9c77bq4pwezqz9d0jewn,imgname-ballari-lineman-1783578800359.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಳ್ಳಾರಿ: ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿಯಾಗಿದೆ. &amp;nbsp;&quot;ಕಾಪಾಡಿ.. ಕಾಪಾಡಿ..&quot; ಎಂದು ಕಂಬದ ಮೇಲೆಯೇ ನರಳಾಡುತ್ತಾ, ಜೀವ ಉಳಿಸಿಕೊಳ್ಳಲು ಹೋರಾಡಿದ ಯುವಕನೊಬ್ಬ ಆಸರೆಯಿಲ್ಲದೆ ಕಂಬದ ಮೇಲೆಯೇ ನೇತಾಡಿ ಪ್ರಾಣಬಿಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಂಗನಕಲ್ ಗ್ರಾಮದ ಬಳಿ ನಡೆದಿದೆ.&lt;/p&gt;&lt;h2&gt;&lt;strong&gt;ಹೃದಯ ವಿದ್ರಾವಕ ಸಾವು&lt;/strong&gt;&lt;/h2&gt;&lt;p&gt;ಬಳ್ಳಾರಿ ಜಿಲ್ಲೆಯ ಯರ್ರಗುಡಿ ಗ್ರಾಮದ ನಿವಾಸಿ ಹುಲಗಪ್ಪ (22) ಮೃತಪಟ್ಟ ದುರ್ದೈವಿ. ಬಡತನದ ಹಿನ್ನೆಲೆಯಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ ಈ ಯುವಕನಿಗೆ ಸಾವು ಇಷ್ಟು ಭೀಕರವಾಗಿ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಸಂಗನಕಲ್ ಗ್ರಾಮದ ಧ್ಯಾನ ಮಂದಿರದ ಬಳಿ ವಿದ್ಯುತ್ ಲೈನ್ ಸರಿಪಡಿಸಲು ಈತನನ್ನು ಕಂಬ ಹತ್ತಿಸಲಾಗಿತ್ತು.&lt;/p&gt;&lt;h3&gt;&lt;strong&gt;15 ನಿಮಿಷಗಳ ಕಾಲ ಸಾವಿನ ಕಿರುಚಾಟ!&lt;/strong&gt;&lt;/h3&gt;&lt;p&gt;ವಿದ್ಯುತ್ ಕಂಬ ಏರಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಹೈವೋಲ್ಟೇಜ್ ಕರೆಂಟ್ ತಗುಲಿದ ಪರಿಣಾಮ ಹುಲಗಪ್ಪ ಕಂಬದ ಮೇಲೆಯೇ ಸಿಲುಕಿಕೊಂಡಿದ್ದಾನೆ. ಮೈ ನಡುಗಿಸುವ ಈ ದೃಶ್ಯ ನೋಡುಗರ ಎದೆ ಒಡೆಯುವಂತಿತ್ತು. ಸುಮಾರು 15 ನಿಮಿಷಗಳ ಕಾಲ ಹುಲಗಪ್ಪ ನನ್ನನ್ನು ಉಳಿಸಿ.. ಯಾರಾದರೂ ಕಾಪಾಡಿ ಎಂದು ಕಿರುಚಾಡಿದ್ದಾನೆ. ಆದರೆ ಕೆಳಗೆ ನಿಂತಿದ್ದ ಇತರ ಕಾರ್ಮಿಕರು ಅಸಹಾಯಕರಾಗಿ ನೋಡುತ್ತಿದ್ದರೇ ಹೊರತು, ಆತನನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಸರಿಯಾದ ಸುರಕ್ಷತಾ ಸಾಧನಗಳಿಲ್ಲದೆ, ಅಧಿಕಾರಿಗಳ ಮಾರ್ಗದರ್ಶನವಿಲ್ಲದೆ ಆ ಯುವಕ ನರಳಾಡಿ ನರಳಾಡಿ ಕಂಬದ ಮೇಲೆಯೇ ಶವವಾಗಿದ್ದಾನೆ.&lt;/p&gt;&lt;h3&gt;&lt;strong&gt;ಜೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ&lt;/strong&gt;&lt;/h3&gt;&lt;p&gt;ಈ ಸಾವಿಗೆ ಜೆಸ್ಕಾಂ (JESCOM) ಅಧಿಕಾರಿಗಳು ಮತ್ತು ಲೇಬರ್ ಗುತ್ತಿಗೆದಾರನ ನೇರ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಲೈನ್ ಸರಿಪಡಿಸುವ ಮೊದಲು ಲೈನ್ ಕ್ಲಿಯರೆನ್ಸ್ (LC - Line Clearance) ಪಡೆಯುವುದು ಕಡ್ಡಾಯ. ಆದರೆ ಅಧಿಕಾರಿಗಳು ಎಲ್&zwnj;ಸಿ ಪಡೆಯದೆಯೇ ಹುಲಗಪ್ಪನನ್ನು ಕಂಬ ಹತ್ತಿಸಿದ್ದಾರೆ. ಅಷ್ಟೇ ಅಲ್ಲದೆ, ಅಪಾಯಕಾರಿ ಕೆಲಸ ನಡೆಯುವಾಗ ಸ್ಥಳದಲ್ಲಿ ಯಾವುದೇ ಲೈನ್ ಮ್ಯಾನ್ ಅಥವಾ ಜವಾಬ್ದಾರಿಯುತ ಅಧಿಕಾರಿ ಇರಲಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;p&gt;ಮೃತ ಹುಲಗಪ್ಪನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಬಡ ಕುಟುಂಬದ ಆಧಾರಸ್ತಂಭವಾಗಿದ್ದ ಯುವಕ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಹೆಣವಾಗಿ ಮನೆಗೆ ಮರಳಿದ್ದಾನೆ. ಈ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಘಟನೆಯ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಡವರ ಜೀವಕ್ಕೆ ಬೆಲೆಯೇ ಇಲ್ಲವೇ? ಎಂದು ಸಾರ್ವಜನಿಕರು ಆಕ್ರೋಶದಿಂದ ಪ್ರಶ್ನಿಸುತ್ತಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/ballari/heart-touching-incident-in-ballari-worker-died-on-electric-poll-due-to-power-shocked/articleshow-t5p330n"/>
        </item>
        <item>
            <title><![CDATA[Tailoring: ಖಾಸಗಿ ಶಾಲೆಗಳೇ ಸಮವಸ್ತ್ರ ಪೂರೈಕೆ: ಟೈಲರ್‌ಗಳ ಬದುಕು ಅಯೋಮಯ! ಆದಾಯ ಕುಸಿತ]]></title>
            <link>https://kannada.asianetnews.com/karnataka-districts/ballari-private-schools-are-selling-uniforms-directly-there-is-a-direct-impact-on-the-income-of-traditional-tailors-mrq/articleshow-ufreulp</link>
            <guid isPermaLink="true">https://kannada.asianetnews.com/karnataka-districts/ballari-private-schools-are-selling-uniforms-directly-there-is-a-direct-impact-on-the-income-of-traditional-tailors-mrq/articleshow-ufreulp</guid>
            <pubDate>Wed, 19 Aug 2026 05:49:47 +0530</pubDate>
            <description><![CDATA[&lt;p&gt;ಖಾಸಗಿ ಶಾಲೆಗಳು ನೇರವಾಗಿ ಸಮವಸ್ತ್ರಗಳನ್ನು ಮಾರಾಟ ಮಾಡುತ್ತಿರುವುದರಿಂದ, ಸಾಂಪ್ರದಾಯಿಕ ಟೈಲರ್&zwnj;ಗಳ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕಳೆದ ಐದು ವರ್ಷಗಳಿಂದ ಈ ಪದ್ಧತಿಯು ಜಾರಿಯಲ್ಲಿದ್ದು, ಶಾಲಾ ಸಮವಸ್ತ್ರ ಹೊಲಿಗೆಯನ್ನೇ ನಂಬಿದ್ದ ನೂರಾರು ಟೈಲರ್&zwnj;ಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೃಷಿ ಹಿನ್ನಡೆ ಮತ್ತು ಸಿದ್ಧ ಉಡುಪುಗಳ ಹೆಚ್ಚಳವು ಅವರ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0bp4fzhzb9tenf6zw783ws9,imgname-tailors-1787098710001.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;&lt;strong&gt;ಬಳ್ಳಾರಿ: &lt;/strong&gt;ಶಾಲಾ ಸಮವಸ್ತ್ರದಲ್ಲೂ ಲಾಭ ಗಳಿಸುವ ಉದ್ದೇಶದಿಂದ ಕಳೆದ ಐದು ವರ್ಷಗಳಿಂದ ಬಹುತೇಕ ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ತಾವೇ ಸಮವಸ್ತ್ರ ಪೂರೈಸುತ್ತಿದ್ದು, ಇದರಿಂದ ಸಾಂಪ್ರದಾಯಿಕವಾಗಿ ಶಾಲಾ ಮಕ್ಕಳ ಬಟ್ಟೆ ಹೊಲಿಯುವ ವೃತ್ತಿಯನ್ನೇ ಅವಲಂಬಿಸಿರುವ ನೂರಾರು ಟೈಲರ್&zwnj;ಗಳ ಆದಾಯಕ್ಕೆ ಪೆಟ್ಟು ಬಿದ್ದಿದೆ.&lt;/p&gt;&lt;p&gt;ಪ್ರತಿವರ್ಷ ಶಾಲೆಗಳು ಆರಂಭವಾಗುವ ಜೂನ್&zwnj;ನಿಂದ ಆಗಸ್ಟ್&zwnj; ವರೆಗೆ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಸಮವಸ್ತ್ರ ಹೊಲಿಗೆ ಕೆಲಸ ದೊರೆಯುತ್ತಿತ್ತು. ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಪೋಷಕರು ಮಕ್ಕಳಿಗೆ ಸಮವಸ್ತ್ರದ ಬಟ್ಟೆ ಖರೀದಿಸಿ, ಟೈಲರ್&zwnj;ಗಳ ಬಳಿ ಅಳತೆ ನೀಡಿ ಹೊಲಿಸಿಕೊಳ್ಳುತ್ತಿದ್ದರು. ಇದರಿಂದ ಮೂರು ತಿಂಗಳ ಅವಧಿಯಲ್ಲಿ ಉತ್ತಮ ಆದಾಯ ಬರುತ್ತಿತ್ತು. ಆದರೆ, ಖಾಸಗಿ ಶಾಲೆಗಳು ಸಮವಸ್ತ್ರವನ್ನೇ ಸಿದ್ಧಪಡಿಸಿ ಮಾರಾಟ ಮಾಡುವ ವ್ಯವಸ್ಥೆ ಅಳವಡಿಸಿಕೊಂಡ ಬಳಿಕ ಈ ಅವಕಾಶವೂ ಬಹುತೇಕ ಇಲ್ಲದಂತಾಗಿದೆ. ಶಾಲೆಗಳು ನಿರ್ದಿಷ್ಟ ಅಂಗಡಿ ಅಥವಾ ಸಂಸ್ಥೆಯ ಮೂಲಕ ಸಮವಸ್ತ್ರ ತಯಾರಿಸಿ, ಪೋಷಕರಿಗೆ ನಿಗದಿತ ದರದಲ್ಲಿ ಮಾರಾಟ ಮಾಡುತ್ತಿವೆ. ಕೆಲವೆಡೆ ಶಾಲೆಯ ಆವರಣದಲ್ಲಿಯೇ ಸಮವಸ್ತ್ರ ಮಾರಾಟ ಮಾಡುವ ವ್ಯವಸ್ಥೆಯೂ ಇದೆ. ಪರಿಣಾಮ ಪೋಷಕರು ಸ್ಥಳೀಯ ಟೈಲರ್&zwnj;ಗಳ ಬಳಿ ಹೊಲಿಸುವ ಅವಕಾಶ ಕಳೆದುಕೊಂಡಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಯ ಹಣದ ಹಪಾಹಪಿಯಿಂದಾಗಿ ಅನೇಕ ವರ್ಷಗಳಿಂದ ಟೈಲರ್ ವೃತ್ತಿಯ ಅವಲಂಬಿಸಿದವರ ಬದುಕು ಅಯೋಮಯವಾಗಿದೆ. ವಿಕಲಚೇತನ ಟೈಲರ್&zwnj;ಗಳ ಪರಿಸ್ಥಿತಿಯಂತೂ ಹೇಳತೀರದಾಗಿದೆ.&lt;/p&gt;&lt;h2&gt;&lt;strong&gt;ಕೃಷಿ ಸಂಕಷ್ಟದ ಪರಿಣಾಮ&lt;/strong&gt;&lt;/h2&gt;&lt;p&gt;ಜಿಲ್ಲೆಯ ರೈತರ ಕೃಷಿ ಪ್ರಗತಿಗೂ ಕಳೆದ ಮೂರು ವರ್ಷಗಳಿಂದ ಹಿನ್ನಡೆಯಾಗಿದ್ದು, ಈ ಬಾರಿಯ ಮುಂಗಾರು ಕೂಡ ನಿರೀಕ್ಷಿತ ಮಟ್ಟದಲ್ಲಿ ಕೈಹಿಡಿಯದಿರುವುದು ಗ್ರಾಮೀಣ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ರೈತರ ಆದಾಯ ಕುಸಿದಿರುವುದರಿಂದ ಬಟ್ಟೆ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೂ ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸಾಮಾನ್ಯವಾಗಿ ಬಟ್ಟೆ ಹೊಲಿಗೆ ಕೆಲಸ ಹೆಚ್ಚಾಗಬೇಕಿದ್ದ ಸಮಯದಲ್ಲೂ ಟೈಲರ್&zwnj;ಗಳಿಗೆ ನಿರೀಕ್ಷಿತ ಪ್ರಮಾಣದ ಕೆಲಸ ಸಿಗುತ್ತಿಲ್ಲ. ಇದೂ ಟೈಲರ್&zwnj;ಗಳ ವೃತ್ತಿಯ ಮೇಲೆ ಪರಿಣಾಮ ಬೀರಿದೆ ಎಂದು ಟೈಲರ್&zwnj;ಗಳು ಅಳಲು ತೋಡಿಕೊಳ್ಳುತ್ತಾರೆ.&lt;/p&gt;&lt;h3&gt;&lt;strong&gt;ವೃತ್ತಿಯನ್ನೇ ನಂಬಿದವರ ಗೋಳು&lt;/strong&gt;&lt;/h3&gt;&lt;p&gt;ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಪಟ್ಟಣ ಹಾಗೂ ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಟೈಲರಿಂಗ್&zwnj; ಅಂಗಡಿಗಳನ್ನು ನಡೆಸುತ್ತಿರುವ ಅನೇಕರು ಇದೇ ವೃತ್ತಿಯನ್ನೇ ಜೀವನಾಧಾರ ಮಾಡಿಕೊಂಡಿದ್ದಾರೆ. ಬಳ್ಳಾರಿ ನಗರದಲ್ಲಿ ಜೀನ್ಸ್&zwnj; ಟೈಲರಿಂಗ್ ಹೊರತುಪಡಿಸಿ ಸಾಂಪ್ರದಾಯಿಕ ಉಡುಪುಗಳನ್ನು ಹೊಲಿಯುವ ಟೈಲರ್&zwnj;ಗಳು 1 ಸಾವಿರಕ್ಕೂ ಅಧಿಕ ಜನರಿದ್ದಾರೆ. ಜಿಲ್ಲೆಯಲ್ಲಿ 3 ಸಾವಿರಕ್ಕೂ ಅಧಿಕ ಜನರು ಟೈಲರ್&zwnj; ವೃತ್ತಿಯ ಮೇಲೆಯೇ ಬದುಕು ಕಟ್ಟಿಕೊಂಡಿದ್ದಾರೆ. ಇವರಿಗೆ ಮದುವೆ, ಹಬ್ಬ, ಶಾಲಾ ಸಮವಸ್ತ್ರ ಸೇರಿದಂತೆ ವಿವಿಧ ಬಟ್ಟೆಗಳ ಹೊಲಿಗೆ ಕೆಲಸವೇ ಅವರ ಪ್ರಮುಖ ಆದಾಯದ ಮೂಲವಾಗಿತ್ತು. ಆದರೆ, ಸಿದ್ಧ ಉಡುಪುಗಳ ಬಳಕೆ ಹೆಚ್ಚಳ, ಆನ್&zwnj;ಲೈನ್&zwnj; ಖರೀದಿ ಹಾಗೂ ಶಾಲೆಗಳೇ ಸಮವಸ್ತ್ರ ಪೂರೈಸುತ್ತಿರುವುದರಿಂದ ಸಾಂಪ್ರದಾಯಿಕ ಟೈಲರ್&zwnj; ವೃತ್ತಿಗೆ ಹೊಡೆತ ಬಿದ್ದಿದೆ.&lt;/p&gt;&lt;p&gt;&lsquo;ಶಾಲೆಗಳು ಸಮವಸ್ತ್ರ ಪೂರೈಸುವುದನ್ನು ನಿಲ್ಲಿಸಿ, ಪೋಷಕರು ತಮ್ಮ ಇಷ್ಟದ ಟೈಲರ್&zwnj; ಬಳಿ ಹೊಲಿಸಿಕೊಳ್ಳಲು ಅವಕಾಶ ನೀಡಬೇಕು. ಇದರಿಂದ ಸ್ಥಳೀಯ ಸಣ್ಣ ವೃತ್ತಿದಾರರಿಗೆ ಕೆಲಸ ಸಿಗಲಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮಂತೆಯೇ ಬೇರೆಯವರದ್ದೂ ಬದುಕು ಇದೆ ಎಂಬ ಮಾನವೀಯತೆ ಮೈಗೂಡಿಸಿಕೊಳ್ಳಬೇಕು ಎಂದು ಟೈಲರ್&zwnj;ಗಳು ಮನವಿ ಮಾಡುತ್ತಿದ್ದಾರೆ. ಇವರ ಸಮಸ್ಯೆಗಳ ನಿವಾರಣೆಗೆ ಪೂರಕ ಕ್ರಮದ ಅಗತ್ಯವಿದೆ.&lt;/p&gt;&lt;p&gt;ಕಳೆದ ಐದು ವರ್ಷಗಳಿಂದ ಕೆಲಸವಿಲ್ಲದೆ ಒದ್ದಾಡುತ್ತಿದ್ದೇನೆ. ಸಮವಸ್ತ್ರಗಳನ್ನು ಶಾಲೆಯಲ್ಲಿಯೇ ವಿತರಣೆ ಮಾಡುತ್ತಿರುವುದರಿಂದ ನಮಗೆ ಕಷ್ಟವಾಗಿದೆ. ಬದುಕು ನಿರ್ವಹಣೆಗೂ ಪರದಾಡುವಂತಾಗಿದೆ. ನಮ್ಮ ಕಷ್ಟ ಯಾರ ಮುಂದೆ ಹೇಳಿಕೊಳ್ಳಬೇಕು ಎಂಬುದೇ ತಿಳಿಯದಾಗಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ ಬಳ್ಳಾರಿಯ ಪಾರ್ವತಿನಗರದ ವಿಕಲಚೇತನ ಟೈಲರ್ ನಾಗರಾಜ್ ಅವರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ballari-private-schools-are-selling-uniforms-directly-there-is-a-direct-impact-on-the-income-of-traditional-tailors-mrq/articleshow-ufreulp"/>
        </item>
        <item>
            <title><![CDATA[ನಾಗೇಂದ್ರ ತಲೆದಂಡಕ್ಕೆ ಬಿಜೆಪಿ ಬಿಗ್ ಪ್ಲಾನ್! ಬಳ್ಳಾರಿ ಪಾದಯಾತ್ರೆ ದಿನಾಂಕ, ಆರಂಭ ಸ್ಥಳದ ಬಗ್ಗೆ ಶೀಘ್ರ ಘೋಷಣೆ?]]></title>
            <link>https://kannada.asianetnews.com/politics/bjp-big-plan-nagendra-s-resignation-ballari-padayatra-date-place-announcement-soon-rav/articleshow-uidb8pg</link>
            <guid isPermaLink="true">https://kannada.asianetnews.com/politics/bjp-big-plan-nagendra-s-resignation-ballari-padayatra-date-place-announcement-soon-rav/articleshow-uidb8pg</guid>
            <pubDate>Sat, 22 Aug 2026 05:56:08 +0530</pubDate>
            <description><![CDATA[&lt;p&gt;ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಪರಿಶಿಷ್ಟ ಪಂಗಡದ ನಾಯಕರ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆಯು, ನಾಗೇಂದ್ರ ಅವರ ಕ್ಷೇತ್ರವಾದ ಬಳ್ಳಾರಿಯಲ್ಲಿ ಅಂತ್ಯಗೊಳ್ಳುವಂತೆ ಪ್ಲಾನ್!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kztkdre8rjwvbqh9s3p1f1sq,imgname-----------------------2026-08-12t142816.307-1786525442504.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.22): &lt;/strong&gt;ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದು, ಬರುವ ಸೋಮವಾರ ಅಥವಾ ಮಂಗಳವಾರದ ಹೊತ್ತಿಗೆ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ.&lt;/p&gt;&lt;p&gt;ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಪಕ್ಷದ ನಾಯಕರು ಪಾದಯಾತ್ರೆ ನಡೆಸಲು ಉತ್ಸುಕರಾಗಿದ್ದು, ಅದರ ರೂಪುರೇಷೆಗಳ ಬಗ್ಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ದಿನಾಂಕ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;ಸದ್ಯ ವಿಧಾನಮಂಡಲ ಅಧಿವೇಶನದ ಒಳಗೆ ಮತ್ತು ಹೊರಗೆ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಸತತವಾಗಿ ಧರಣಿ, ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ, ತಕ್ಷಣಕ್ಕೆ ಪಾದಯಾತ್ರೆ ಘೋಷಣೆ ಮಾಡುವ ಬದಲು ಅಧಿವೇಶನ ಮುಕ್ತಾಯಗೊಳ್ಳುವ ಹಂತದಲ್ಲಿ ಘೋಷಣೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಪಕ್ಷದ ರಾಜ್ಯ ನಾಯಕರು ಹೊಂದಿದ್ದಾರೆ. ಅಧಿವೇಶನ ಈ ತಿಂಗಳ 27ರಂದು ಮುಕ್ತಾಯಗೊಳ್ಳಲಿದ್ದು, 24 ಅಥವಾ 25ರಂದು (ಸೋಮವಾರ ಅಥವಾ ಮಂಗಳವಾರ) ಅಧಿಕೃತವಾಗಿ ಘೋಷಣೆ ಮಾಡುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;ಬಿಜೆಪಿ ಪಾದಯಾತ್ರೆ ಎಲ್ಲಿಂದ ಎಲ್ಲಿಯವರೆಗೆ?&lt;/h2&gt;&lt;p&gt;ರಾಜ್ಯದಲ್ಲಿ ಒಟ್ಟು 15 ಪರಿಶಿಷ್ಟ ಪಂಗಡ (ಎಸ್&zwnj;ಟಿ) ಮೀಸಲು ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಬಹುತೇಕ ಬಳ್ಳಾರಿ, ರಾಯಚೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಯಾದಗಿರಿ ಜಿಲ್ಲೆಗಳಲ್ಲೇ ಇವೆ. ಹೀಗಾಗಿ, ಪಾದಯಾತ್ರೆ ಈ ಜಿಲ್ಲೆಗಳನ್ನು ಹಾದು ಹೋಗುವಂತೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಪಾದಯಾತ್ರೆ ಯಾವುದೇ ಜಿಲ್ಲೆಯಿಂದ ಆರಂಭಗೊಂಡರೂ ಅಂತಿಮವಾಗಿ ನಾಗೇಂದ್ರ ಅವರು ಪ್ರತಿನಿಧಿಸುವ ಬಳ್ಳಾರಿಯಲ್ಲಿ ಅಂತ್ಯಗೊಳ್ಳುವಂತೆ ಮಾರ್ಗ ನಿಗದಿಪಡಿಸಲಾಗುತ್ತಿದೆ.&lt;/p&gt;&lt;h3&gt;ಪಾದಯಾತ್ರೆ ರದ್ದಾಗಿಲ್ಲ-ರಾಮುಲು:&lt;/h3&gt;&lt;p&gt;ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಪಾದಯಾತ್ರೆ ರದ್ದಾಗಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಮ್ಮ ಪಕ್ಷದ ನಾಯಕರು ಸದನದಲ್ಲಿ ಹೋರಾಟ ಮಾಡುತ್ತಿದ್ದಾರೆ. ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ಗೊಂದಲ ಆಗಬಾರದು ಎಂಬ ಕಾರಣಕ್ಕಾಗಿ ಹಂತ ಹಂತದ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.&lt;/p&gt;&lt;p&gt;ಪಾದಯಾತ್ರೆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಚರ್ಚೆ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರೇ ಅದರ ಬಗ್ಗೆ ಮುಂದೆ ತಿಳಿಸುತ್ತಾರೆ. ಪಾದಯಾತ್ರೆ ರದ್ದಾಗಿಲ್ಲ. ಅದರ ರೂಪುರೇಷೆ ಸಿದ್ಧಗೊಳ್ಳುತ್ತಿದೆ. ಪಕ್ಷದ ನಾಯಕರ ಜತೆ ಚರ್ಚಿಸಿ ರಾಜ್ಯಾಧ್ಯಕ್ಷರು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bjp-big-plan-nagendra-s-resignation-ballari-padayatra-date-place-announcement-soon-rav/articleshow-uidb8pg"/>
        </item>
        <item>
            <title><![CDATA[ಕೈಕೊಟ್ಟ ಮುಂಗಾರು ಮಳೆ; 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕಜೋಳ ಬೆಳೆ ನಾಶಪಡಿಸಿದ ರೈತ]]></title>
            <link>https://kannada.asianetnews.com/karnataka-districts/ballari-lack-of-monsoon-rains-h-veerapur-village-s-farmer-destroys-5-acres-of-maize-crop-in-kurugodu-taluk-mrq/articleshow-xo9ycx8</link>
            <guid isPermaLink="true">https://kannada.asianetnews.com/karnataka-districts/ballari-lack-of-monsoon-rains-h-veerapur-village-s-farmer-destroys-5-acres-of-maize-crop-in-kurugodu-taluk-mrq/articleshow-xo9ycx8</guid>
            <pubDate>Sat, 08 Aug 2026 08:16:51 +0530</pubDate>
            <description><![CDATA[ಕುರುಗೋಡು ತಾಲೂಕಿನಲ್ಲಿ ಮುಂಗಾರು ಮಳೆ ಸಂಪೂರ್ಣ ವಿಫಲವಾದ ಕಾರಣ, ಎಚ್.ವೀರಾಪುರ ಗ್ರಾಮದ ರೈತರೊಬ್ಬರು ತಮ್ಮ ಐದು ಎಕರೆ ಮೆಕ್ಕೆಜೋಳ ಬೆಳೆಯನ್ನು ಟ್ರ್ಯಾಕ್ಟರ್ ಬಳಸಿ ನಾಶಪಡಿಸಿದ್ದಾರೆ. ಕೊಳವೆಬಾವಿ ಇದ್ದರೂ, ಅನಿಯಮಿತ ವಿದ್ಯುತ್ ಕಡಿತ ಮತ್ತು ಅಂತರ್ಜಲ ಕುಸಿತದಿಂದ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗದೆ, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzfkyg0jjhayg5xzxxab74cv,imgname-farmer-1786156892178.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ: &lt;/strong&gt;ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಎಚ್.ವೀರಾಪುರ ಗ್ರಾಮದ ರೈತ ರಾಜಾಸಾಬ್ ಐದು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ಗುರುವಾರ ಟ್ರ್ಯಾಕ್ಟರ್ ಬಳಸಿ ನಾಶಪಡಿಸಿದರು.&lt;/p&gt;&lt;p&gt;ಮುಂಗಾರು ಪೂರ್ವ ಮಳೆಯಿಂದ ಪುಳಕಿತರಾಗಿದ್ದ ರೈತ ರಾಜಾಸಾಬ್ ಮೂರು ಎಕರೆ ಕೊಳವೆಬಾವಿ ಆಶ್ರಿತ ಭೂಮಿ ಮತ್ತು ಎರಡು ಎಕರೆ ಮಳೆಯಾಶ್ರಿತ ಭೂಮಿ ಸೇರಿ ಒಟ್ಟು ಐದು ಎಕರೆಯಲ್ಲಿ ಮೆಕ್ಕಜೋಳ ಬೆಳೆಯುವ ಪ್ರಯತ್ನ ಮಾಡಿದ್ದರು. ನಂತರ ದಿನಗಳಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಬೆಳೆಯನ್ನು ಉಳಿಸಿಕೊಳ್ಳಲು ಕೊಳವೆ ಬಾವಿಯ ನೀರು ಹರಿಸಲು ಪ್ರಯತ್ನಿಸಿದ್ದಾರೆ.&lt;/p&gt;&lt;h2&gt;&lt;strong&gt;ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕುಸಿತ&lt;/strong&gt;&lt;/h2&gt;&lt;p&gt;ಅನಿಯಮಿತ ವಿದ್ಯುತ್ ಕಡಿತ ಮತ್ತು ಅಂತರ್ಜಲ ಕೃಷಿಯಿಂದ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಕೈಗೆಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆ ಉಳಿಸಿಕೊಳ್ಳಲು ದಾರಿ ಕಾಣದೆ ಬೆಳೆಯನ್ನು ಟ್ರ್ಯಾಕ್ಟರ್ ಸಹಾಯ ದಿಂದ ನಾಶ ಮಾಡಿದ್ದಾರೆ.15 ದಿನಗಳ ಹಿಂದೆ ಮಳೆ ಬಂದಿದ್ದರೆ ಫಸಲು ಸಮೃದ್ಧವಾಗಿ ಬೆಳೆದು ಆಗಸ್ಟ್ ತಿಂಗಳ ಅಂತ್ಯದಲ್ಲಿ ಕಟಾವಿಗೆ ಬರುತ್ತಿತ್ತು.&lt;/p&gt;&lt;p&gt;ಎಕರೆಗೆ 50 ಕ್ವಿಂಟಲ್ ಇಳುವರಿ ನಿರೀಕ್ಷಿಸಲಾಗಿತ್ತು. ಕನಿಷ್ಠ ₹5 ಲಕ್ಷ ಮೌಲ್ಯದ ಮೆಕ್ಕೆಜೋಳ ದೊರೆಯುತ್ತಿತ್ತು. ಮಳೆ ಬಾರದ ಪರಿಣಾಮ ವೆಚ್ಚ ಮಾಡಿದ ₹2 ಲಕ್ಷದ ಜತೆಗೆ ಸಮಯ ಮತ್ತು ಶ್ರಮ ವ್ಯರ್ಥವಾಗಿದೆ ಎನ್ನುತ್ತಾರೆ ರೈತ ರಾಜಾ ಸಾಬ್.&lt;/p&gt;&lt;h3&gt;&lt;strong&gt;ರೈತರಿಗೆ ಕೃಷಿ ನಿರ್ದೇಶಕರ ಸಲಹೆ&lt;/strong&gt;&lt;/h3&gt;&lt;p&gt;ಬೆಳೆ ಆ್ಯಪ್&zwnj;ನಲ್ಲಿ ರೈತರು ಸ್ವಯಂ ಬೆಳೆ ಸಮೀಕ್ಷೆ ಮಾಡಿಕೊಂಡರೆ ಮಾತ್ರ, ಅದರ ಆದಾರದಲ್ಲಿ ಬೆಳೆನಷ್ಟ ಪರಿಹಾರ ದೊರೆಯುತ್ತದೆ. ರೈತರು ಬೆಳೆನಾಶ ಮಾಡುವ ಮೊದಲು ಬೆಳೆ ಆ್ಯಪ್&zwnj;ನಲ್ಲಿ ಸ್ವಯಂ ಸಮೀಕ್ಷೆ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಗರ್ಜೆಪ್ಪ ಸಲಹೆ ನೀಡಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ballari-lack-of-monsoon-rains-h-veerapur-village-s-farmer-destroys-5-acres-of-maize-crop-in-kurugodu-taluk-mrq/articleshow-xo9ycx8"/>
        </item>
    </channel>
</rss>
