<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 27 Jun 2026 17:33:04 +0530</lastBuildDate>
        <atom:link href="https://kannada.asianetnews.com/rss/ballari" rel="self" type="application/rss+xml"/>
        <item>
            <title><![CDATA[ತೆಕ್ಕಲಕೋಟೆಯಲ್ಲಿ ಅಪರೂಪದ ಹುಲಿ ಬೇಟೆಯ ವೀರಗಲ್ಲು ಪತ್ತೆ; ಪರಾಕ್ರಮದ ವಿಶೇಷ ಕೆತ್ತನೆ]]></title>
            <link>https://kannada.asianetnews.com/karnataka-districts/tekkalakote-of-siruguppa-taluk-of-ballari-archaeological-department-has-discovered-a-tiger-hunting-hero-veeragallu-mrq/articleshow-1phdhyb</link>
            <guid isPermaLink="true">https://kannada.asianetnews.com/karnataka-districts/tekkalakote-of-siruguppa-taluk-of-ballari-archaeological-department-has-discovered-a-tiger-hunting-hero-veeragallu-mrq/articleshow-1phdhyb</guid>
            <pubDate>Sun, 07 Jun 2026 07:47:14 +0530</pubDate>
            <description><![CDATA[ಬಳ್ಳಾರಿಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ, ಭಾರತ ಶ್ರೀ ಯೋಜನೆಯಡಿ ನಡೆದ ಡಿಜಿಟಲೀಕರಣ ಪ್ರಕ್ರಿಯೆ ವೇಳೆ, ಮೈಸೂರು ಪುರಾತತ್ವ ಇಲಾಖೆಯು ಹುಲಿಬೇಟೆಯ ವೀರಗಲ್ಲೊಂದನ್ನು ಪತ್ತೆಹಚ್ಚಿದೆ. ಈ ಶಾಸನವು ಅನುಮಯರ ಮಗನೊಬ್ಬ ಹುಲಿಬೇಟೆಯಲ್ಲಿ ಮಡಿದ ಸ್ಮರಣಾರ್ಥ ಕೆತ್ತಲಾಗಿದ್ದು, ವೀರನ ಪರಾಕ್ರಮವನ್ನು ಕಲಾತ್ಮಕವಾಗಿ ಚಿತ್ರಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktfxvshg2y2p9rmcv19pa4w2,imgname-veeragallu-1780798580272.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ 14ನೇ ವಾರ್ಡಿನ ವಾಲ್ಮೀಕಿ ನಗರದ ವಡ್ಡರಕಟ್ಟೆ ಬಳಿ ಹುಲಿಬೇಟೆ ವೀರಗಲ್ಲು ಪತ್ತೆಯಾಗಿದೆ ಎಂದು ಮೈಸೂರು ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಅಧೀಕ್ಷಕ, ಶಾಸನತಜ್ಞ ಅನಿಲಕುಮಾರ್ ಆರ್.ವಿ. ತಿಳಿಸಿದ್ದಾರೆ.&lt;/p&gt;&lt;p&gt;ಭಾರತ ಶ್ರೀ ಯೋಜನೆಯಡಿ ತೆಕ್ಕಲಕೋಟೆ ಪಟ್ಟಣ ಹಾಗೂ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಸನಗಳ ಸಂರಕ್ಷಣೆಗೆ ನಡೆದ ಡಿಜಿಟಲೀಕರಣ ಪ್ರಕ್ರಿಯೆ ಭಾಗವಾಗಿ ಪಟ್ಟಣದಲ್ಲಿ ಭೇಟಿ ನೀಡಿ ವೀರಗಲ್ಲಿನ ಪಡಿಯಚ್ಚು ಪಡೆದುಕೊಂಡರು.&lt;/p&gt;&lt;h2&gt;&lt;strong&gt;ಸಂಪೂರ್ಣ ಮಾಹಿತಿ ಲಭ್ಯವಿಲ್ಲ&lt;/strong&gt;&lt;/h2&gt;&lt;p&gt;ಶಾಸನ ತಿಳಿಸುವಂತೆ, ಅನುಮಯರ ಮಗ ಹುಲಿಬೇಟೆಯಲ್ಲಿ ಮರಣ ಹೊಂದಿದ. ಆತನ ಸ್ಮರಣಾರ್ಥ ವೀರಗಲ್ಲು ಕೆತ್ತಲಾಗಿದೆ. ಇದರಲ್ಲಿ ಅಂಗೀರಸ ಸಂವತ್ಸರ, ವೈಶಾಖ ಬ 8 ಎಂದು ಕಾಲದ ವಿವರವಿದ್ದು, ಸಂಪೂರ್ಣ ಮಾಹಿತಿ ಲಭ್ಯವಿಲ್ಲ.&lt;/p&gt;&lt;p&gt;ಶಾಸನ ಶಿಲ್ಪವು ಬಹಳ ಕಲಾತ್ಮಕವಾಗಿ ಕಡೆಯಲಾಗಿದೆ. ವೀರನು ತನ್ನ ಕೈಯಲ್ಲಿ ಖಡ್ಗ ಹಿಡಿದು ವೀರಾವೇಶದಿಂದ ಹುಲಿಯೊಡನೆ ಹೋರಾಡುತ್ತಿರುವ ದೃಶ್ಯ ಹಾಗೂ ಹುಲಿಯ ಕೆಳಭಾಗದಲ್ಲಿ ವೀರನ ಬೇಟೆಯ ನಾಯಿ ಕೂಡ ಆತನಷ್ಟೇ ಪರಾಕ್ರಮದಿಂದ ಹೋರಾಡುತ್ತಿರುವ ದೃಶ್ಯ ಶಿಲ್ಪಿಯ ಕಲೆಗಾರಿಕೆ ಕಂಡು ಬರುತ್ತಿದೆ ಎಂದು ಎಎಸ್ ಐ ಸಹಾಯಕ ಅಧೀಕ್ಷಕ ತಿಳಿಸಿದ್ದಾರೆ.&lt;/p&gt;&lt;p&gt;ಈ ಕಾರ್ಯದಲ್ಲಿ ಮೈಸೂರು ಶಾಸನ ನಿರ್ದೇಶಕರ ಕಚೇರಿಯ ಸಿಬ್ಬಂದಿ ನಾಗೇಂದ್ರ, ನಿಶಾಂತಕುಮಾರ್ ಗೌರವ್, ಇತಿಹಾಸ ಸಂಶೋಧನಾರ್ಥಿಗಳಾದ ಮನೋಹರ ಸಿ.ಎಂ, ಎಂ ಹೊನ್ನೂರ ಭಾಗವಹಿಸಿದ್ದರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/tekkalakote-of-siruguppa-taluk-of-ballari-archaeological-department-has-discovered-a-tiger-hunting-hero-veeragallu-mrq/articleshow-1phdhyb"/>
        </item>
        <item>
            <title><![CDATA[Ballari University Exam Scam: ಬಳ್ಳಾರಿ ವಿವಿಯಲ್ಲಿ ಹಣ ಕೊಟ್ಟರೆ ಪರೀಕ್ಷೆ ಪಾಸ್‌! ಆಡಿಯೊ ವೈರಲ್]]></title>
            <link>https://kannada.asianetnews.com/education/bellari-university-s-illegality-exposed-pass-exams-if-you-pay-money-rav/articleshow-2n3b1ba</link>
            <guid isPermaLink="true">https://kannada.asianetnews.com/education/bellari-university-s-illegality-exposed-pass-exams-if-you-pay-money-rav/articleshow-2n3b1ba</guid>
            <pubDate>Fri, 12 Jun 2026 12:41:03 +0530</pubDate>
            <description><![CDATA[&lt;p&gt;ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಣ ಪಡೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ದಂಧೆ ಬಯಲಾಗಿದೆ. ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktx9wxg3gy2gv2v7v0eagnn0,imgname-----------------------2026-06-12t122409.378-1781247407619.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ&lt;/strong&gt;&lt;/p&gt;&lt;p&gt;&lt;strong&gt;ಬಳ್ಳಾರಿ (ಜೂ.12):&lt;/strong&gt; ಬಳ್ಳಾರಿ ವಿವಿ ಘಟಿಕೋತ್ಸವ(Ballari University) ನಕಲಿ ಪ್ರಮಾಣಪತ್ರ ಹಗರಣ(Fake certificate scam)ದ ಮೂಲಕ ರಾಜ್ಯದ ಗಮನ ಸೆಳೆದ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ(Vijayanagara Sri Krishna Devaraya University)ದಲ್ಲಿ ಈಗ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪಾಸ್ ಮಾಡುವ ದಂಧೆ ಬಲು ಜೋರು!&lt;/p&gt;&lt;p&gt;ವಿವಿಯ ಪರೀಕ್ಷಾ ವಿಭಾಗದ ಸಿಬ್ಬಂದಿ ಹಾಗೂ ವಿದ್ಯಾರ್ಥಿ ನಡುವಿನ ಮೊಬೈಲ್ ಸಂಭಾಷಣೆ ವೈರಲ್ ಆಗಿದ್ದು, ವಿವಿಯಲ್ಲಿ ಅನುತ್ತೀರ್ಣಗೊಂಡವರು ದುಡ್ಡು ಕೊಟ್ಟರೆ ಪಾಸ್&zwnj; ಮಾಡುವ ಜಾಲ ಬಯಲು.&lt;/p&gt;&lt;p&gt;ಕಳೆದ ಜನವರಿಯಲ್ಲಿ ಜರುಗಿದ ಪದವಿ, ಸ್ನಾತಕೋತ್ತರ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವರು ವಿವಿಯ ಪರೀಕ್ಷಾ ಸಿಬ್ಬಂದಿಯ ಸಹಾಯ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸಲು ಹಣದ ಮಾತುಕತೆ ಮಾಡಿದ್ದಾರೆ. ₹8 ರಿಂದ 10 ಸಾವಿರ ವರೆಗೆ ಹಣ ಪಡೆದು ಪಾಸ್ ಮಾಡುತ್ತಿರುವ ವಿಚಾರ ಆಡಿಯೋ ಸಂಭಾಷಣೆಯಿಂದ ಬಹಿರಂಗಗೊಂಡಿದೆ. ಈ ಕೃತ್ಯ ಹಲವು ವರ್ಷಗಳಿಂದಲೂ ವಿವಿಯಲ್ಲಿ ನಡೆಯುತ್ತಿದ್ದು, ಈಗ ಬಹಿರಂಗಗೊಂಡಿದೆ ಎಂಬ ಆರೋಪಗಳು ಕೇಳಿ ಬಂದಿದೆ.&lt;/p&gt;&lt;h2&gt;ಸಿಬ್ಬಂದಿ ವಿರುದ್ಧ ಕ್ರಮ:&lt;/h2&gt;&lt;p&gt;ಪ್ರಕರಣ ಕುರಿತು ಕನ್ನಡಪ್ರಭಕ್ಕೆ ಪ್ರತಿಕ್ರೀಯಿಸಿದ ಕುಲಪತಿ ಪ್ರೊ.ಎಂ.ಮುನಿರಾಜು, ವಿಶ್ವವಿದ್ಯಾಲಯದ ಹೆಸರು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಈಗ ವೈರಲ್ ಆಗಿರುವ ಆಡಿಯೋ ಹಳೆಯದ್ದು ಎಂದಿದ್ದಾರೆ.&lt;/p&gt;&lt;p&gt;ಆಡಿಯೋ ಹಳೆಯದಾಗಿರಬಹುದು. ಧ್ವನಿ ಯಾರದು ಎಂದು ಗೊತ್ತಾಗುತ್ತದೆಯಲ್ಲವೇ? ಎಂದು ಪ್ರಶ್ನಿಸಿದಾಗ, ಹೌದು ಗೊತ್ತಾಗಿದೆ. ಆಡಿಯೋದಲ್ಲಿ ಕೇಳಿ ಬಂದ ಹೆಸರಿನ ಸಿಬ್ಬಂದಿ ವಿರುದ್ಧ ಖಂಡಿತ ಕ್ರಮ ವಹಿಸುತ್ತೇನೆ. ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ಯಾರೇ ಆಗಲಿ ನನಗೆ ಮುಲಾಜಿಲ್ಲ. ಈ ರೀತಿಯ ಕೃತ್ಯ ಎಸಗಿದವರನ್ನು ಕೆಲಸದಿಂದ ತೆಗೆದು ಹಾಕುತ್ತೇನೆ ಎಂದು ತಿಳಿಸಿದರು.&lt;/p&gt;&lt;p&gt;ನಕಲಿ ಘಟಿಕೋತ್ಸವ ಪ್ರಕರಣದಲ್ಲಿ ಕೋಟ್ಯಂತರ ರು. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಪ್ರಕರಣ ಈವರೆಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನಿಖೆ ನಡೆಸಲಾಗುತ್ತಿದೆ. ಕ್ರಮ ವಹಿಸುತ್ತೇವೆ. ಯಾರೇ ಆಗಲಿ ಮುಲಾಜಿಲ್ಲ ಎಂದು ವಿವಿ ಕುಲಪತಿ ಹೇಳುತ್ತಲೇ ಬಂದಿದ್ದಾರೆ. ಏತನ್ಮಧ್ಯೆ ಮತ್ತೊಂದು ಪ್ರಕರಣ ವಿವಿಗೆ ಸುತ್ತಿಕೊಂಡಿದೆ. ಹಣಕೊಟ್ಟರೆ ಪರೀಕ್ಷೆಯಲ್ಲಿ ಪಾಸ್ ಮಾಡಿಸುವ ದಂಧೆಕೋರರ ವಿರುದ್ಧ ಕುಲಪತಿ ಯಾವ ಕ್ರಮ ಜರುಗಿಸುತ್ತಾರೆ ಎಂಬ ಕುತೂಹಲವಿದೆ.&lt;/p&gt;&lt;p&gt;ಎಬಿವಿಪಿ ಪ್ರತಿಭಟನೆ:ಈ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ವಿವಿ ಮುಂದೆ ಪ್ರತಿಭಟನೆ ನಡೆಸಿ, ಪರೀಕ್ಷಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೆಂಕಟೇಶ್, ರಿಯಾಜ್ ಮತ್ತಿತರರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಅವ್ಯವಹಾರ ತುಂಬ ದಿನಗಳಿಂದ ನಡೆಯುತ್ತಿದೆ. ಆಡೀಯೋ ವೈರಲ್&zwnj;ನಿಂದ ಬಹಿರಂಗಗೊಂಡಿದೆ. ಕೂಡಲೇ ಕುಲಪತಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಹಣಕೊಟ್ಟರೆ ಪರೀಕ್ಷೆಯಲ್ಲಿ ಪಾಸ್ ಮಾಡುವ ಕುರಿತು ವೈರಲ್ ಆಗಿರುವ ಆಡಿಯೋ ಹಳೆಯದ್ದು. ಆದಾಗ್ಯೂ ಆಡಿಯೋ ವೈರಲ್ ಆದ ಬಳಿಕ ಪರೀಕ್ಷಾ ಸಿಬ್ಬಂದಿ ಯಾರೆಂದು ತಿಳಿದಿದ್ದು, ಕರೆಸಿ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದು ಹೇಳಿರುವೆ. ಈ ಬಗ್ಗೆ ದೂರು ಕೊಡುವೆ. ತನಿಖೆ ಮಾಡಿಸುವೆ. ತಪ್ಪಿಸ್ಥರು ಯಾರೇ ಆಗಲಿ ಕ್ರಮ ವಹಿಸುತ್ತೇವೆ. ಹೋರಾಟ ಮಾಡಿರುವ ಎಬಿವಿಪಿ ಮುಖಂಡರಿಗೆ ಸಾಕ್ಷ್ಯ ನೀಡುವಂತೆ ನೋಟಿಸ್ ನೀಡಿರುವೆ ಎನ್ನುತ್ತಾರೆ ಬಳ್ಳಾರಿ ವಿವಿ ಕುಲಪತಿ ಪ್ರೊ.ಎಂ.ಮುನಿರಾಜು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/bellari-university-s-illegality-exposed-pass-exams-if-you-pay-money-rav/articleshow-2n3b1ba"/>
        </item>
        <item>
            <title><![CDATA[ಬಳ್ಳಾರಿ RDPR ಎಇಇ ತಿಪ್ಪೇಸ್ವಾಮಿಗೆ ಲೋಕಾಯುಕ್ತ ಶಾಕ್! ನಗದು, ಚಿನ್ನಾಭರಣ, ಕೋಟ್ಯಂತರ ಮೌಲ್ಯದ ಸೈಟ್‌ಗಳು ಪತ್ತೆ!]]></title>
            <link>https://kannada.asianetnews.com/karnataka-districts/karnataka-news-lokayukta-raids-ballari-rdpr-engineer-aee-thippeswamy-gold-cash-and-sites-seized-gdp/articleshow-4i1yxvx</link>
            <guid isPermaLink="true">https://kannada.asianetnews.com/karnataka-districts/karnataka-news-lokayukta-raids-ballari-rdpr-engineer-aee-thippeswamy-gold-cash-and-sites-seized-gdp/articleshow-4i1yxvx</guid>
            <pubDate>Tue, 23 Jun 2026 12:23:47 +0530</pubDate>
            <description><![CDATA[ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಪ್ಪೇಸ್ವಾಮಿ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ನಡೆದ ಈ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvskzdds2r3fkjcj1zx6a270,imgname-lokayukta-raids-ballari-rdpr-aee-thippeswamy-1782197499321.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆಯೇ ಭ್ರಷ್ಟ ಅಧಿಕಾರಿಯೊಬ್ಬರಿಗೆ ಬಿಸಿ ಮುಟ್ಟಿಸಿದ್ದಾರೆ. ಸಿರುಗುಪ್ಪದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ತಿಪ್ಪೇಸ್ವಾಮಿ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ.&lt;/p&gt;&lt;h2&gt;ಮೂರು ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ&lt;/h2&gt;&lt;p&gt;ಲೋಕಾಯುಕ್ತ ಎಸ್&zwnj;ಪಿ ವಾಸುದೇವ್ ಅವರ ಖುದ್ದು ನೇತೃತ್ವದಲ್ಲಿ ಇಡೀ ಕಾರ್ಯಾಚರಣೆ ನಡೆದಿದೆ. ಎಇಇ ತಿಪ್ಪೇಸ್ವಾಮಿ ಅಕ್ರಮವಾಗಿ ಕೋಟ್ಯಂತರ ಆಸ್ತಿ ಸಂಪಾದಿಸಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಅಧಿಕಾರಿಗಳು ಪ್ರತ್ಯೇಕ ಮೂರು ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಿದ್ದಾರೆ.&lt;/p&gt;&lt;p&gt;ಬಳ್ಳಾರಿಯ ಹನುಮಾನ್ ನಗರದಲ್ಲಿರುವ ತಿಪ್ಪೇಸ್ವಾಮಿ ಅವರ ಪ್ರಧಾನ ನಿವಾಸ, ಕುಡತಿನಿ ಪಟ್ಟಣದಲ್ಲಿರುವ ಅವರ ಮತ್ತೊಂದು ನಿವಾಸ, ಸಿರುಗುಪ್ಪದಲ್ಲಿರುವ ಅವರ ಅಧಿಕೃತ ಆರ್&zwnj;ಡಿಪಿಆರ್ ಕಚೇರಿ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಅಧಿಕಾರಿಗಳು ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;ಮನೆಯಲ್ಲಿ ಸಿಕ್ಕ ಅಕ್ರಮ ಸಂಪತ್ತು ಎಷ್ಟು?&lt;/h2&gt;&lt;p&gt;ಬಳ್ಳಾರಿಯ ಹನುಮಾನ್ ನಗರದಲ್ಲಿರುವ ತಿಪ್ಪೇಸ್ವಾಮಿ ಅವರ ನಿವಾಸದ ಮೇಲೆ ನಡೆದ ದಾಳಿಯ ವೇಳೆ ಚಿನ್ನ, ಬೆಳ್ಳಿ ಹಾಗೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಪ್ರಾಥಮಿಕ ತಪಾಸಣೆಯ ಅವಧಿಯಲ್ಲೇ ಅಧಿಕಾರಿಗಳು ಈ ಕೆಳಗಿನ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಂಡು ದಾಖಲೆ ಪರಿಶೀಲಿಸುತ್ತಿದ್ದಾರೆ.&lt;/p&gt;&lt;p&gt;ಸುಮಾರು 300 ಗ್ರಾಂ ತೂಕದ ಚಿನ್ನದ ಆಭರಣಗಳು, 800 ಗ್ರಾಂ ತೂಕದ ಬೆಳ್ಳಿ ಆಭರಣ ಹಾಗೂ ಸಾಮಗ್ರಿಗಳು, ಮನೆಯಲ್ಲಿ ಗಂಟು ಕಟ್ಟಿ ಇಡಲಾಗಿದ್ದ 1 ಲಕ್ಷ ರೂಪಾಯಿ ನಗದು ಹಣ. ವಿವಿಧೆಡೆ ಖರೀದಿಸಲಾಗಿರುವ ಬರೋಬ್ಬರಿ 6 ಸೈಟ್&zwnj;ಗಳಿಗೆ (ನಿವೇಶನ) ಸಂಬಂಧಿಸಿದ ಪ್ರಮುಖ ದಸ್ತಾವೇಜುಗಳು ಪತ್ತೆಯಾಗಿದೆ.&lt;/p&gt;&lt;h2&gt;ಬ್ಯಾಂಕ್ ಖಾತೆ ಸೀಜ್ ಮಾಡಿದ ಅಧಿಕಾರಿಗಳು&lt;/h2&gt;&lt;p&gt;ಕೇವಲ ಭೌತಿಕ ಆಸ್ತಿ ಮಾತ್ರವಲ್ಲದೆ ತಿಪ್ಪೇಸ್ವಾಮಿ ಅವರ ಬ್ಯಾಂಕ್ ವಹಿವಾಟುಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಪ್ರಾಥಮಿಕ ತನಿಖೆಯ ಭಾಗವಾಗಿ ತಿಪ್ಪೇಸ್ವಾಮಿ ಅವರ ಬ್ಯಾಂಕ್ ಖಾತೆಯಲ್ಲಿದ್ದ 5 ಲಕ್ಷ ರೂಪಾಯಿ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ತಕ್ಷಣವೇ ಜಪ್ತಿ (Freeze) ಮಾಡಿದ್ದಾರೆ. ಇವರ ಹೆಸರಿನಲ್ಲಿರುವ ಇತರೆ ಬ್ಯಾಂಕ್ ಲಾಕರ್&zwnj;ಗಳು ಹಾಗೂ ಹೂಡಿಕೆಗಳ ಬಗ್ಗೆಯೂ ತನಿಖೆ ಮುಂದುವರೆದಿದೆ.&lt;/p&gt;&lt;p&gt;ಸದ್ಯ ಹನುಮಾನ್ ನಗರದ ನಿವಾಸ ಹಾಗೂ ಇತರೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಸುದೀರ್ಘ ಪರಿಶೀಲನೆ ಮತ್ತು ದಾಖಲೆಗಳ ತಪಾಸಣೆ ಕಾರ್ಯ ಮುಂದುವರೆದಿದೆ. ಸರ್ಕಾರದ ಪ್ರಮುಖ ಇಲಾಖೆಯಲ್ಲಿದ್ದುಕೊಂಡು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡು ಆಸ್ತಿ ಗಳಿಸಿರುವ ಈ ಅಧಿಕಾರಿಯ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದಾಖಲೆಗಳ ಪರಿಶೀಲನೆ ಮುಂದುವರೆದಿದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-news-lokayukta-raids-ballari-rdpr-engineer-aee-thippeswamy-gold-cash-and-sites-seized-gdp/articleshow-4i1yxvx"/>
        </item>
        <item>
            <title><![CDATA[ಬಳ್ಳಾರಿಯಲ್ಲಿ ಯುವಕನ ಭೀಕರ ಹ*ತ್ಯೆ: ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!]]></title>
            <link>https://kannada.asianetnews.com/crime/ballari-youth-mu-rder-case-body-burnt-after-killing-basavanagouda-gvd/articleshow-6nb4vdu</link>
            <guid isPermaLink="true">https://kannada.asianetnews.com/crime/ballari-youth-mu-rder-case-body-burnt-after-killing-basavanagouda-gvd/articleshow-6nb4vdu</guid>
            <pubDate>Mon, 08 Jun 2026 21:10:43 +0530</pubDate>
            <description><![CDATA[&lt;p&gt;ಯುವಕನನ್ನು ಹ*ತ್ಯೆಗೈದು ದುಷ್ಕರ್ಮಿಗಳು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಮೃತ ದೇಹವನ್ನು ಬರೋಬ್ಬರಿ 13 ಕಿಲೋಮೀಟರ್ ದೂರದವರೆಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jyk54a7zg48733zetfgbsr1d,imgname-crime-scene-1750842091775.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಜೂ.08): &lt;/strong&gt;ತಾಲೂಕು ವ್ಯಾಪ್ತಿಯ ಎಲ್ಎಲ್ಸಿ ಕಾಲುವೆಯ ಬಳಿ ಯುವಕನನ್ನು ಹ*ತ್ಯೆಗೈದು ದುಷ್ಕರ್ಮಿಗಳು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಮೃತ ದೇಹವನ್ನು ಬರೋಬ್ಬರಿ 13 ಕಿಲೋಮೀಟರ್ ದೂರದವರೆಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.&lt;/p&gt;&lt;p&gt;ಮೃತಪಟ್ಟ ಯುವಕ ಅನಂತಪುರ ಜಿಲ್ಲೆಯ ವ್ಯಾಪ್ತಿಯ ಬೊಲ್ಲನಗುಡ್ಡಂ ಪ್ರದೇಶದ ನಿವಾಸಿ ಬಸವನಗೌಡ (27) ಎಂದು ಗುರುತಿಸಿಲಾಗಿದೆ. ಪಕ್ಕಾ ಪ್ಲಾನ್ ಮಾಡಿ ಮೃತದೇಹಕ್ಕೆ ಬೆಂಕಿ ಹಚ್ಚಿದ್ದರೂ ಶನಿವಾರ ಸುರಿದ ಮಳೆಯಿಂದಾಗಿ ಬೆಂಕಿ ನಂದಿಹೋಗಿದ್ದು, ಶವವು ಅರ್ಧಂಬರ್ಧ ಸುಟ್ಟುಹೋಗಿ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;p&gt;ಘಟನಾ ಸ್ಥಳದಲ್ಲಿ ದೊರೆತ ಸುಳಿವು ಹಾಗೂ ಹ*ತ್ಯೆ ನಡೆದ ರೀತಿಯನ್ನು ಗಮನಿಸಿದರೆ ಇದು ಪ್ರೀತಿ ಪ್ರೇಮ ವಿಷಯಕ್ಕೆ ಸಂಬಂಧಿಸಿದ್ದು ಎನ್ನಲಾಗ್ತಿದೆ. ಎಲ್ಎಲ್ಸಿ ಕಾಲುವೆ ಬಳಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ, ಅರ್ಧ ಸುಟ್ಟು ಕರಕಲಾದ ಮೃತದೇಹದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಕರಣ ದಾಖಲು&lt;/strong&gt;&lt;/h2&gt;&lt;p&gt;ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದಾಗ, ಮೃತದೇಹ ದೊರೆತ ಸ್ಥಳದಿಂದ 13 ಕಿಲೋಮೀಟರ್ ದೂರದಲ್ಲಿ ಮೃತ ಯುವಕನಿಗೆ ಸೇರಿದ ಪಲ್ಸರ್ ಬೈಕ್, ಚಪ್ಪಲಿಗಳು ದೊರಕಿವೆ. ಮೃತ ಯುವಕ ಬಳ್ಳಾರಿಯ ಖಾಸಹಿ ಡಯಾಗ್ನೋಸ್ಟಿಕ್ ಸೆಂಟರ್&zwnj;ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಬಸವನಗೌಡ ಅವರದ್ದು ಎಂದು ದೃಢಪಡಿಸಿದ್ದಾರೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.&lt;/p&gt;]]></content:encoded>
            <category>ballari</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/ballari-youth-mu-rder-case-body-burnt-after-killing-basavanagouda-gvd/articleshow-6nb4vdu"/>
        </item>
        <item>
            <title><![CDATA[KAAMS app for teachers: ಕರ್ನಾಟಕದ ಸರ್ಕಾರಿ ಶಿಕ್ಷಕರಿಗೆ ಹೊಸ ಹಾಜರಾತಿ ನಿಯಮ; ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ!]]></title>
            <link>https://kannada.asianetnews.com/education/karnataka-teacher-facial-recognition-and-location-attendance-mandatory/articleshow-9goxu4k</link>
            <guid isPermaLink="true">https://kannada.asianetnews.com/education/karnataka-teacher-facial-recognition-and-location-attendance-mandatory/articleshow-9goxu4k</guid>
            <pubDate>Sun, 31 May 2026 09:07:58 +0530</pubDate>
            <description><![CDATA[&lt;p&gt;ರಾಜ್ಯ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರಿಗೆ ಲೊಕೇಶನ್ ಮತ್ತು ಫೇಸ್ ಆಧರಿತ 'ಕೆಎಎಎಂಎಸ್&zwnj;' ಆ್ಯಪ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಹೊಸ ನಿಯಮದ ಪ್ರಕಾರ, ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗದಿದ್ದರೆ ಅಥವಾ ಬೇಗ ನಿರ್ಗಮಿಸಿದರೆ, ಅದನ್ನು ರಜೆ ಎಂದು ಪರಿಗಣಿಸಿ ಕಠಿಣ ಕ್ರಮ!&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksy16s2112m6fz4vydev1qbg,imgname-----------------------2026-05-31t085645.476-1780198106177.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಂಜುನಾಥ ಕೆ.ಎಂ.&lt;/p&gt;&lt;p&gt;&lt;strong&gt;&amp;nbsp;ಬಳ್ಳಾರಿ (ಮೇ.31): &lt;/strong&gt;ಇನ್ನು ಮುಂದೆ ಸರ್ಕಾರಿ ಶಾಲೆ ಶಿಕ್ಷಕರು, ಸಿಬ್ಬಂದಿ ನಾನಾ ಕಾರಣವೊಡ್ಡಿ ಶಾಲೆಗೆ ತಡವಾಗಿ ಬರುವಂತಿಲ್ಲ. ಶಾಲೆಗೆ ಚಕ್ಕರ್ ಹೊಡೆದು ಅಲ್ಲಲ್ಲಿ ಓಡಾಡುವಂತಿಲ್ಲ.&lt;/p&gt;&lt;p&gt;ರಾಜ್ಯ ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಿದೆ. ನಿರ್ದಿಷ್ಟ ಸಮಯ ಮೀರಿ ಶಾಲೆಗೆ ಹಾಜರಾದರೆ ಆ ದಿನ ಆಕಸ್ಮಿಕ ರಜೆಯೆಂದೇ ಪರಿಗಣಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕರ್ನಾಟಕ ಅಡ್ವಾನ್ಸ್&zwnj; ಅಟೆಂಡೆನ್ಸ್ ಮ್ಯಾನೇಜ್&zwnj;ಮೆಂಟ್ ಸಿಸ್ಟಮ್ (ಕೆಎಎಎಂಎಸ್&zwnj;) ಆ್ಯಪ್&zwnj; ರೂಪಿಸಲಾಗಿದೆ.&lt;/p&gt;&lt;p&gt;ಶುಕ್ರವಾರದಿಂದಲೇ ರಾಜ್ಯಾದ್ಯಂತ ಈ ನಿಯಮ ಜಾರಿಗೊಂಡಿದೆ. ಇನ್ಮುಂದೆ ಸರ್ಕಾರಿ ಶಾಲೆ ಶಿಕ್ಷಕರು ನಿರ್ದಿಷ್ಟ ಅವಧಿಯೊಳಗೆ ಶಾಲೆಗೆ ಹಾಜರಾಗಿ ದಿನಕ್ಕೆರೆಡು ಬಾರಿ ಲೊಕೇಶನ್, ಫೇಸ್ ಆಧರಿತ ಹಾಜರಾತಿ ಹಾಕಬೇಕಾಗಿದೆ. ಸರ್ಕಾರದ ಈ ನಿಲುವನ್ನು ಪೋಷಕರು, ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರ ವಲಯ ಸ್ವಾಗತಿಸಿದೆ. ಇನ್ನೊಂದು ತಿಂಗಳಲ್ಲಿ ವಿದ್ಯಾರ್ಥಿಗಳಿಗೂ ಎಐ ಆಧಾರಿತ ಹಾಜರಾತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.&lt;/p&gt;&lt;h2&gt;ಹೊಂದಾಣಿಕೆಗೆ ಕುತ್ತು:&lt;/h2&gt;&lt;p&gt;ಸರ್ಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರ ಪೈಕಿ ಕೆಲವರು ಶಾಲೆಗೆ ಹಾಜರಾಗದೆ ಹಾಜರಾತಿ ಪಡೆದುಕೊಂಡು ಸಂಬಳ ಮಾಡಿಕೊಳ್ಳುತ್ತಿದ್ದರು. ಕೆಲವರು ಮುಖ್ಯಗುರುಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಹಾಜರಾತಿ ಪಡೆದುಕೊಂಡರೆ, ಇನ್ನು ಕೆಲವರು ಸಂಘಟನೆ ಹೆಸರಿನಲ್ಲಿ ಓಡಾಡಿಕೊಂಡು ಶಾಲೆಗೆ ಗೈರಾಗುತ್ತಿದ್ದರು. ಶಾಲೆಗೆ ಗೈರಾಗುವುದನ್ನೇ ಕಾಯಕ ಮಾಡಿಕೊಂಡ ಅನೇಕ ಶಿಕ್ಷಕರು ಶಾಲೆಯ ಮುಖ ನೋಡುವುದೇ ಅಪರೂಪ ಎನ್ನುವಂತಾಗಿತ್ತು.&lt;/p&gt;&lt;h3&gt;ಬೇಗ ಹೋದರು ತೊಂದರೆ:&lt;/h3&gt;&lt;p&gt;ಶಿಕ್ಷಕರ ಕಡ್ಡಾಯ ಹಾಜರಾತಿ ಸಂಬಂಧ ಕೈಗೊಂಡ ತಂತ್ರಜ್ಞಾನ ಆಧರಿತ ಹಾಜರಾತಿ ಬಗ್ಗೆ ನಿರ್ಲಕ್ಷಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನಿಗದಿತ ಶಾಲಾ ಅವಧಿ ಮುಗಿಯುವ ಮುನ್ನವೇ ಚೆಕ್&zwnj;ಔಟ್ ಆದಲ್ಲಿ ಆರಂಭಿಕ ನಿರ್ಗಮನ (Early Departure) ಎಂದು ಪರಿಗಣಿಸಿ, ಅದನ್ನು ಕರ್ತವ್ಯದ ಅವಗಣನೆ ಅಥವಾ ಕರ್ತವ್ಯ ಲೋಪ ಎಂದು ಪರಿಗಣಿಸಲಾಗುತ್ತದೆ. ಇದಕ್ಕೆ ಅರ್ಧ ದಿನದ ರಜೆ ಕಡಿತವಾಗಲಿದೆ.&lt;/p&gt;&lt;p&gt;ಶಾಲೆಯ ಅಧಿಕೃತ ಮುಕ್ತಾಯದ ಸಮಯಕ್ಕಿಂತ ತೀರಾ ಮುಂಚಿತವಾಗಿ (ಉದಾಹರಣೆಗೆ ಮಧ್ಯಾಹ್ನದ ಅವಧಿಯಲ್ಲಿ) ಯಾವುದೇ ಪೂರ್ವಾನುಮತಿ ಇಲ್ಲದೇ ಚೆಕ್&zwnj;ಔಟ್ ಆದರೆ ಆ ದಿನದ ದ್ವಿತೀಯಾರ್ಧವನ್ನು ಅರ್ಧ ದಿನದ ರಜೆ, ಅರ್ಧದಿನದ ಆಕಸ್ಮಿಕ ರಜೆ (ಸಿಎಲ್) ಎಂದು ಪರಿಗಣಿಸಲಾಗುವುದು. ರಜೆಯ ಖಾತೆಯಲ್ಲಿ ಆಕಸ್ಮಿಕ ರಜೆ ಬಾಕಿ ಇಲ್ಲದಿದ್ದರೆ, ಅದನ್ನು ಗಳಿಕೆ ರಜೆ (ಇಎಲ್) ಅಥವಾ ವೇತನ ರಹಿತ ರಜೆ ಎಂದು ಬದಲಾಯಿಸಲಾಗುತ್ತದೆ.&lt;/p&gt;&lt;p&gt;&lt;strong&gt;ಬಿಇಒ ನೋಟಿಸ್:&lt;/strong&gt;&lt;/p&gt;&lt;p&gt;ಒಂದು ತಿಂಗಳಲ್ಲಿ ಮೂರು ಬಾರಿ ತಡವಾಗಿ ಬರುವುದು ಮತ್ತು ಬೇಗ ಹೋಗುವುದು ಮಾಡಿದಲ್ಲಿ 1 ದಿನದ ಆಕಸ್ಮಿಕ ರಜೆ ಕಡಿತಗೊಳಿಸಲಾಗುವುದು. ​ಯಾವುದೇ ಮುನ್ಸೂಚನೆ ಅಥವಾ ಅನುಮತಿ ಇಲ್ಲದೇ ಬೇಗ ಚೆಕ್&zwnj;ಔಟ್ ಆಗುವುದು ಸತತ ಕಂಡುಬಂದಲ್ಲಿ ಅದನ್ನು &lsquo;ಅನಧಿಕೃತ ಗೈರುಹಾಜರಿ&rsquo; ಎಂದು ಪರಿಗಣಿಸಿ, ಬಿಇಒ ಅಥವಾ ಡಿಡಿಪಿಐ ಮಟ್ಟದಲ್ಲಿ ಕಾರಣ ಕೇಳುವ ನೋಟಿಸ್ ನೀಡಲಾಗುತ್ತದೆ. ​ಇದು ಸೇವಾ ವರದಿ ಮತ್ತು ವಾರ್ಷಿಕ ವೇತನ ಬಡ್ತಿ ಮೇಲೆಯೂ ಪ್ರಭಾವ ಬೀರಲಿದೆ.&lt;/p&gt;&lt;p&gt;&lt;strong&gt;ರಿಯಾಯಿತಿ ದರ ಅರ್ಧ ಗಂಟೆಗೆ ಹೆಚ್ಚಿಸಲಿ:&lt;/strong&gt;&lt;/p&gt;&lt;p&gt;ಶಾಲೆ ಬೆಳಗ್ಗೆ 9:45ಕ್ಕೆ ಆರಂಭ ಆಗುವುದಾದರೆ, 9:55 ಅಥವಾ 10 ಗಂಟೆ ಒಳಗೆ Check-in ಮಾಡಲು ಅವಕಾಶವಿದೆ. ಆದರೆ, ಸಾರಿಗೆ ವ್ಯವಸ್ಥೆಯಿಲ್ಲದ ಹಳ್ಳಿಗಳಿಗೆ ಶಿಕ್ಷಕರು ತಲುಪುವುದು ಕಷ್ಟವಾಗಲಿದೆ. 15 ನಿಮಿಷಗಳ ರಿಯಾಯಿತಿ ಸಮಯ ಅರ್ಧಗಂಟೆಗೆ ಹೆಚ್ಚಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ.&lt;/p&gt;&lt;p&gt;----&lt;/p&gt;&lt;p&gt;&lt;strong&gt;ಕ್ರಮ ಎದುರಿಸಿ&lt;/strong&gt;&lt;/p&gt;&lt;p&gt;ಶಿಕ್ಷಕರಿಗೆ ಲೊಕೇಶನ್, ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ ಅಳವಡಿಸಲಾಗಿದೆ. ಶಿಕ್ಷಕರು ಇಲಾಖೆಯ ಸೂಚನೆಯಂತೆ ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಇಲಾಖೆ ಕ್ರಮ ಎದುರಿಸಬೇಕು.&lt;/p&gt;&lt;p&gt;-ಬಿ.ಉಮಾದೇವಿ, ಡಿಡಿಪಿಐ ಬಳ್ಳಾರಿ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/karnataka-teacher-facial-recognition-and-location-attendance-mandatory/articleshow-9goxu4k"/>
        </item>
        <item>
            <title><![CDATA[ಅಬಕಾರಿ ಅಧಿಕಾರಿಯ ಅಕ್ರಮ ಸಾಮ್ರಾಜ್ಯಕ್ಕೆ ಇಡಿ ಶಾಕ್, ಜಾರಕಿಹೊಳಿ ಭಾವ ಮಂಜುನಾಥ್ ವಶಕ್ಕೆ, ಲೆಕ್ಕವಿಲ್ಲದ ಬೇನಾಮಿ ಬಾರ್ ಲೈಸೆನ್ಸ್!]]></title>
            <link>https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt</link>
            <guid isPermaLink="true">https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt</guid>
            <pubDate>Wed, 24 Jun 2026 14:44:49 +0530</pubDate>
            <description><![CDATA[ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮೇಲೆ ಅಕ್ರಮ ಆಸ್ತಿ ಮತ್ತು ಹವಾಲಾ ಆರೋಪದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ನಡೆದ ಶೋಧಕಾರ್ಯದಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್&zwnj;ಗಳು ಪತ್ತೆಯಾಗಿದ್ದು, ಅಧಿಕಾರಿ ಮಂಜುನಾಥ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣವು ರಾಜ್ಯ ಅಬಕಾರಿ ಇಲಾಖೆಯಲ್ಲಿ ದೊಡ್ಡ ಹಗರಣವನ್ನು ಬಯಲುಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvwebjrzd71hqnf1qes1avxc,imgname-karnataka-excise-scam-y-manjunath-1782292269854.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು / ಬೆಳಗಾವಿ: &lt;/strong&gt;ರಾಜ್ಯ ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಹಗರಣವೊಂದು ಬೆಳಕಿಗೆ ಬಂದಿದ್ದು, ಬೆಳಗಾವಿ ವಿಭಾಗದ ಅಬಕಾರಿ ಹೆಚ್ಚುವರಿ ಆಯುಕ್ತ (Additional Commissioner) ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿ ಪತಿ ಹಾಗೂ ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿರುವ ವೈ. ಮಂಜುನಾಥ್ ಅವರನ್ನು ಕೊನೆಗೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ವಿದೇಶಿ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ಲಿಂಕ್ ಹಾಗೂ ಅಕ್ರಮ ಆಸ್ತಿ ಸಂಪಾದನೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ಈ ಜಂಟಿ ಕಾರ್ಯಾಚರಣೆ ನಡೆದಿದೆ. ಕರ್ನಾಟಕ, ಗೋವಾ ಮತ್ತು ರಾಜಸ್ಥಾನ ಸೇರಿದಂತೆ ದೇಶದ ವಿವಿಧ ಭಾಗಗಳ ಇಡಿ ಅಧಿಕಾರಿಗಳನ್ನೊಳಗೊಂಡ ಜಂಟಿ ಪಡೆಗಳು, 10ಕ್ಕೂ ಹೆಚ್ಚು ಅರೆಸೇನಾ ಪಡೆ (CRPF) ಸಿಬ್ಬಂದಿಗಳ ಬಿಗಿ ಭದ್ರತೆಯಲ್ಲಿ ಈ ದಾಳಿ ನಡೆಸಿವೆ.&lt;/p&gt;&lt;h2&gt;ರಾಜ್ಯದ 6 ಪ್ರಮುಖ ಕೇಂದ್ರಗಳಲ್ಲಿ ಏಕಕಾಲಕ್ಕೆ ಇಡಿ ರೇಡ್!&lt;/h2&gt;&lt;p&gt;ಬೆಳ್ಳಂಬೆಳಗ್ಗೆ 5:30ರ ಸುಮಾರಿಗೆ ಇಡಿ ಅಧಿಕಾರಿಗಳು ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿ ವೈ. ಮಂಜುನಾಥ್ ಹಾಗೂ ಅವರ ಆಪ್ತ ಜಾಲವನ್ನು ಗುರಿಯಾಗಿಸಿಕೊಂಡು ಬೆಂಗಳೂರು, ಬೆಳಗಾವಿ, ಮೈಸೂರು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಮತ್ತು ಅಥಣಿ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ.&lt;/p&gt;&lt;p&gt;&lt;strong&gt;ಬೆಂಗಳೂರು:&lt;/strong&gt; ರೇಸ್&zwnj;ಕೋರ್ಸ್ ರಸ್ತೆಯ (ಸ್ಯಾಂಕಿ ರಸ್ತೆ) ಪ್ರತಿಷ್ಠಿತ 'ದಿ ಸಮ್ಮಿಟ್' ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಮಂಜುನಾಥ್ ಅವರ ಐಷಾರಾಮಿ ಫ್ಲಾಟ್ ಮೇಲೆ ಮಹಿಳಾ ಇಡಿ ಅಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ, ಅಲ್ಲಿಯೇ ಇದ್ದ ಮಂಜುನಾಥ್ ಅವರನ್ನು ಸುದೀರ್ಘ ವಿಚಾರಣೆಯ ಬಳಿಕ ವಶಕ್ಕೆ ಪಡೆದಿದೆ.&lt;/p&gt;&lt;p&gt;&lt;strong&gt;ಬೆಳಗಾವಿ: &lt;/strong&gt;ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ಮಂಜುನಾಥ್ ಅವರ ಮುಖ್ಯ ನಿವಾಸದ ಮೇಲೆ ದಾಳಿ ನಡೆದಿದೆ. ಮಹತ್ವದ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಡಿವೈಎಸ್&zwnj;ಪಿ (DySP) ದರ್ಜೆಯ ಹಿರಿಯ ಅಧಿಕಾರಿಯೊಬ್ಬರು ಸ್ಥಳಕ್ಕೆ ದೌಡಾಯಿಸಿದ್ದಾರೆ.&lt;/p&gt;&lt;p&gt;&lt;strong&gt;ವಿಜಯನಗರ (ಅರಸೀಕೆರೆ):&lt;/strong&gt; ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಮಂಜುನಾಥ್ ಅವರಿಗೆ ಸೇರಿದ ಎರಡು ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.&lt;/p&gt;&lt;p&gt;&lt;strong&gt;ಮೈಸೂರು:&lt;/strong&gt; ದಟ್ಟಗಳ್ಳಿ 3ನೇ ಹಂತದ 5ನೇ ಕ್ರಾಸ್&zwnj;ನಲ್ಲಿರುವ #3638 'ಸ್ವಯಂಭು' ನಿವಾಸದ ಮೇಲೆ ದಾಳಿ ನಡೆದಿದೆ. ಇದು ಕೂಡ ಮಂಜುನಾಥ್ ಅವರ ಆಸ್ತಿಯಾಗಿದ್ದು, ಇಲ್ಲಿ ಅವರ ಆತ್ಮೀಯ ಸ್ನೇಹಿತೆ ಹಾಗೂ ಪ್ರಸ್ತುತ ಅಬಕಾರಿ ಇಲಾಖೆ ಇನ್ಸ್&zwnj;ಪೆಕ್ಟರ್ ಆಗಿರುವ ಯಮುನಾ ಮತ್ತು ಅವರ ತಾಯಿ ಸುಲೋಚನಾ ವಾಸವಾಗಿದ್ದರು. ಇಡಿ ಅಧಿಕಾರಿಗಳು ತೀವ್ರ ದಾಖಲೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗಾಗಿ ಯಮುನಾ ಅವರನ್ನು ಮುಖ ಮುಚ್ಚಿಕೊಂಡು ವಾಹನದಲ್ಲಿ ಕರೆದೊಯ್ದಿದ್ದಾರೆ.&lt;/p&gt;&lt;h2&gt;ಮಂಜುನಾಥ್ ಆಪ್ತ ಅಧಿಕಾರಿಗಳಿಗೂ ಇಡಿ ಶಾಕ್!&lt;/h2&gt;&lt;p&gt;ವೈ. ಮಂಜುನಾಥ್ ಅವರ ಅಕ್ರಮ ಜಾಲದಲ್ಲಿ ಶಾಮೀಲಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರ ಆಪ್ತ ವಲಯದ ಇತರ ಅಧಿಕಾರಿಗಳ ಮೇಲೂ ಇಡಿ ಅಧಿಕಾರಿಗಳು ಮುಗಿಬಿದ್ದಿದ್ದಾರೆ:&lt;/p&gt;&lt;p&gt;ಸತೀಶ್ ಶಿವಶಂಕರ ಕಾಗಲೆ (ಎಸ್ಪಿ, ತುಮಕೂರು ಅಬಕಾರಿ ಇಲಾಖೆ): ಮಂಜುನಾಥ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಇವರ ಬೆಳಗಾವಿಯ ಶ್ರೀನಗರದಲ್ಲಿರುವ ಅಪಾರ್ಟ್&zwnj;ಮೆಂಟ್ ಹಾಗೂ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಐದಾರು ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.&lt;/p&gt;&lt;p&gt;ವಿಶ್ವನಾಥ್ ಗಾಣಿಗೇರ (ಡಿವೈಎಸ್ಪಿ, ಚಿಕ್ಕೋಡಿ ಅಬಕಾರಿ ಇಲಾಖೆ): ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿರುವ ಇವರ ನಿವಾಸದ ಮೇಲೂ ದಾಳಿ ನಡೆದಿದ್ದು, ಇವರೂ ಸಹ ಅಕ್ರಮ ವ್ಯವಹಾರಕ್ಕೆ ಸಾಥ್ ನೀಡಿದ ಆರೋಪ ಎದುರಿಸುತ್ತಿದ್ದಾರೆ.&lt;/p&gt;&lt;h2&gt;ದಾಳಿ ವೇಳೆ ಪತ್ತೆಯಾದವು ನೂರಾರು 'ಬೇನಾಮಿ ಬಾರ್ ಲೈಸೆನ್ಸ್'ಗಳು!&lt;/h2&gt;&lt;p&gt;ಇಡಿ ನಡೆಸಿದ ಸುದೀರ್ಘ ಪರಿಶೀಲನೆಯ ವೇಳೆ ಮಂಜುನಾಥ್ ಅವರ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ನಿವಾಸಗಳಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್&zwnj;ಗಳು ಹಾಗೂ ಅವುಗಳ ಅಗ್ರಿಮೆಂಟ್&zwnj; ಬಾಂಡ್&zwnj;ಗಳು ಪತ್ತೆಯಾಗಿವೆ.&lt;/p&gt;&lt;p&gt;ಅಕ್ರಮದ ನೆಟ್&zwnj;ವರ್ಕ್: ಮಂಜುನಾಥ್ ಅವರು ಬೆಳಗಾವಿ, ದಾವಣಗೆರೆ, ಬಳ್ಳಾರಿ, ಮೈಸೂರು ಮತ್ತು ಬೆಂಗಳೂರಿನಲ್ಲಿ ಬೇನಾಮಿ ಹೆಸರಿನಲ್ಲಿ ದೊಡ್ಡ ಪ್ರಮಾಣದ ಬಾರ್ ಮತ್ತು ರೆಸ್ಟೋರೆಂಟ್&zwnj;ಗಳನ್ನು ಸ್ಥಾಪಿಸಿದ್ದರು. ಈ ಬೇನಾಮಿ ಬಾರ್&zwnj;ಗಳಿಂದ ಬರುತ್ತಿದ್ದ ಕೋಟ್ಯಂತರ ರೂಪಾಯಿ ಕಪ್ಪು ಹಣವನ್ನು ಇವರು ವಿದೇಶಗಳಿಗೆ ಅಕ್ರಮವಾಗಿ ವರ್ಗಾವಣೆ (ಹವಾಲಾ ದಂಧೆ) ಮಾಡಿ, ಅಲ್ಲಿ ಹೂಡಿಕೆ ಮಾಡುತ್ತಿದ್ದರು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;2013ರ ಲೋಕಾಯುಕ್ತ ಕೇಸ್; ಪ್ರಭಾವ ಬಳಸಿ ಹುದ್ದೆ ಸೃಷ್ಟಿ!&lt;/h2&gt;&lt;p&gt;ವೈ. ಮಂಜುನಾಥ್ ಅವರ ಅಕ್ರಮಗಳ ಇತಿಹಾಸ ಇಂದಿನದ್ದಲ್ಲ. ಈ ಹಿಂದೆ 2013ರಲ್ಲಿ ಮೈಸೂರು ಅಬಕಾರಿ ಡಿಸಿ (DC) ಆಗಿದ್ದಾಗ ಇವರ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಬಾರ್ ಲೈಸೆನ್ಸ್ ನವೀಕರಣದಲ್ಲಿ (Renewal) ಕೋಟ್ಯಂತರ ರೂಪಾಯಿ ಲಂಚ ಹಾಗೂ ಸಂಬಳಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ (Disproportionate Assets) ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಲಾಖಾ ತನಿಖೆ (DE) ನಡೆದು ಪ್ರಸ್ತುತ ಅದು ಮುಚ್ಚಲ್ಪಟ್ಟಿತ್ತಾದರೂ, ಲೋಕಾಯುಕ್ತದ ಅದೇ ಅಕ್ರಮ ಆಸ್ತಿ ಗಳಿಕೆಯ ಮೂಲ ಕೇಸ್ ಅನ್ನು ಆಧರಿಸಿ ಈಗ ಇಡಿ ಅಖಾಡಕ್ಕಿಳಿದಿದೆ.&lt;/p&gt;&lt;h2&gt;ರಾಜಕೀಯ ಪ್ರಭಾವದ ಆರೋಪ:&amp;nbsp;&lt;/h2&gt;&lt;p&gt;ಈ ಹಿಂದೆ ಅಬಕಾರಿ ಇಲಾಖೆಯಲ್ಲಿ ಕೇವಲ ಬೆಂಗಳೂರು ರೇಂಜ್ ಮಾತ್ರ ಇತ್ತು. ಆದರೆ ಮಂಜುನಾಥ್ ಅವರು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿ ವಿಶೇಷವಾಗಿ 'ಬೆಳಗಾವಿ ಅಬಕಾರಿ ರೇಂಜ್' ಅನ್ನು ಸೃಷ್ಟಿಸಿಕೊಂಡಿದ್ದರು. ಇದರ ಮೂಲಕ ರಾಜ್ಯದ ಅರ್ಧದಷ್ಟು ಜಿಲ್ಲೆಗಳ ಅಬಕಾರಿ ನಿಯಂತ್ರಣದ ಸರ್ವಾಧಿಕಾರವನ್ನು ತಮ್ಮ ಕೈಯಲ್ಲೇ ಇಟ್ಟುಕೊಂಡು, ಕರಾವಳಿ ಮತ್ತು ಗಡಿ ಭಾಗದಲ್ಲಿ ವ್ಯಾಪಕ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಸದ್ಯ ಇಡಿ ಅಧಿಕಾರಿಗಳ ವಶದಲ್ಲಿರುವ ವೈ. ಮಂಜುನಾಥ್ ಹಾಗೂ ವಶಪಡಿಸಿಕೊಳ್ಳಲಾದ ಲೈಸೆನ್ಸ್ ದಾಖಲೆಗಳಿಂದ ಇಲಾಖೆಯ ಇನ್ನೂ ಹಲವು ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ನಡುಕ ಶುರುವಾಗಿದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt"/>
        </item>
        <item>
            <title><![CDATA[ಬಳ್ಳಾರಿ ಪಾಲಿಕೆಗೆ ಲೋಕಾಯುಕ್ತ ಶಾಕ್:  4 ತಂಡಗಳಾಗಿ ದಾಳಿ, ಬಯಲಾಗಲಿದೆಯೇ ಭ್ರಷ್ಟಾಚಾರ?]]></title>
            <link>https://kannada.asianetnews.com/karnataka-districts/lokayukta-raids-ballari-city-corporation-over-massive-illegal-b-khata-and-form-2-property-scam-gdp/articleshow-d7un96t</link>
            <guid isPermaLink="true">https://kannada.asianetnews.com/karnataka-districts/lokayukta-raids-ballari-city-corporation-over-massive-illegal-b-khata-and-form-2-property-scam-gdp/articleshow-d7un96t</guid>
            <pubDate>Sat, 30 May 2026 13:23:57 +0530</pubDate>
            <description><![CDATA[ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಅಕ್ರಮ 'ಬಿ-ಖಾತೆ' ವಿತರಣೆಯ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಎಸ್&zwnj;ಪಿ ವಾಸುದೇವರಾವ್ ನೇತೃತ್ವದ ತಂಡಗಳು ಪಾಲಿಕೆಯ ಕಚೇರಿಗಳಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvxmaaxhh0z6php828hbhr2,imgname-lokayukta-raids-1780127246685.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಬಳ್ಳಾರಿ ಮಹಾನಗರ ಪಾಲಿಕೆ (BMC) ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕೇಳಿಬಂದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸರು ಪಾಲಿಕೆಯ ಕಚೇರಿಗಳ ಮೇಲೆ ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿದ್ದಾರೆ. ನಾಗರಿಕ ಸೇವೆಗಳನ್ನು ಒದಗಿಸುವಲ್ಲಿ ವಿಳಂಬ ಹಾಗೂ ಅಕ್ರಮವಾಗಿ 'ಬಿ-ಖಾತೆ' ಮತ್ತು 'ಫಾರಂ-2' ವಿತರಣೆ ಮಾಡುತ್ತಿರುವ ಗಂಭೀರ ದೂರುಗಳ ಆಧಾರದ ಮೇಲೆ ಈ ಬೃಹತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ.&lt;/p&gt;&lt;p&gt;ಲೋಕಾಯುಕ್ತ ಎಸ್&zwnj;ಪಿ (SP) ವಾಸುದೇವರಾವ್ ಅವರ ನೇರ ನೇತೃತ್ವದಲ್ಲಿ ಇಡೀ ಕಾರ್ಯಾಚರಣೆ ನಡೆದಿದ್ದು, ಪಾಲಿಕೆಯ ಇತಿಹಾಸದಲ್ಲೇ ಇದು ಅತ್ಯಂತ ಪ್ರಮುಖ ದಾಳಿಗಳಲ್ಲಿ ಒಂದಾಗಿದೆ.&lt;/p&gt;&lt;h2&gt;4 ಪ್ರತ್ಯೇಕ ತಂಡಗಳಿಂದ ಏಕಕಾಲಕ್ಕೆ ದಾಳಿ&lt;/h2&gt;&lt;p&gt;ತೀವ್ರ ಪರಿಶೀಲನೆ ಬಳ್ಳಾರಿ ಮಹಾನಗರ ಪಾಲಿಕೆಯ ಕೇಂದ್ರ ಕಚೇರಿ ಮಾತ್ರವಲ್ಲದೆ, ನಗರದ ವಿವಿಧೆಡೆ ಇರುವ ವಲಯ ಕಚೇರಿಗಳ (Zone Offices) ಮೇಲೂ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದಲೇ ದಾಳಿ ಆರಂಭಿಸಿದ್ದಾರೆ. ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಅಧಿಕಾರಿಗಳು ಕಚೇರಿಗಳಿಗೆ ನುಗ್ಗಿದ್ದು, ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ.&lt;/p&gt;&lt;p&gt;ಬೆಳಗ್ಗಿನಿಂದಲೇ ಆರಂಭವಾದ ಈ ಸುದೀರ್ಘ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ತಂಡಗಳು ಪ್ರಮುಖವಾಗಿ ಆಸ್ತಿ ದಾಖಲೆಗಳು, ಬಿ-ಖಾತೆ ಮತ್ತು ಫಾರಂ-2 ಅರ್ಜಿಗಳು, ವಿಳಂಬವಾಗಿರುವ ಕಡತಗಳು, ಜೊತೆಗೆ ಅಕ್ರಮ ಹಣದ ಬೇಡಿಕೆ ಮತ್ತು ಭ್ರಷ್ಟಾಚಾರ. ಕಳೆದ ಕೆಲವು ತಿಂಗಳುಗಳಿಂದ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ಸಕಾಲಕ್ಕೆ ಆಗುತ್ತಿಲ್ಲ ಮತ್ತು ಪ್ರತಿಯೊಂದು ನಾಗರಿಕ ಸೇವೆಗೂ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮಧ್ಯವರ್ತಿಗಳ ಮೂಲಕ ಭಾರಿ ಪ್ರಮಾಣದ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ವ್ಯಾಪಕ ದೂರುಗಳು ಕೇಳಿಬಂದಿದ್ದವು.&lt;/p&gt;&lt;p&gt;ವಿಶೇಷವಾಗಿ, ಅನಧಿಕೃತ ಲೇಔಟ್&zwnj;ಗಳು ಹಾಗೂ ನಿಯಮಬಾಹಿರ ಆಸ್ತಿಗಳಿಗೆ ಅಕ್ರಮವಾಗಿ 'ಬಿ-ಖಾತೆ' ಮತ್ತು 'ಫಾರಂ-2'ಗಳನ್ನು ಸೃಷ್ಟಿಸಿ ವಿತರಿಸಲು ಕಂದಾಯ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಅಕ್ರಮ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ನಿರ್ದಿಷ್ಟ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ತಲುಪಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್&zwnj;ಪಿ ವಾಸುದೇವರಾವ್ ಅವರು ರಹಸ್ಯ ಕಾರ್ಯಾಚರಣೆ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.&lt;/p&gt;&lt;p&gt;ಮಹತ್ವದ ದಾಖಲೆಗಳು ಲೋಕಾಯುಕ್ತ ವಶಕ್ಕೆ ದಾಳಿಯ ವೇಳೆ ಕಂದಾಯ ಮತ್ತು ನಗರಾಭಿವೃದ್ಧಿ ಶಾಖೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವುದಕ್ಕೆ ಪ್ರಥಮ ದೃಷ್ಟಿಯಲ್ಲೇ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ಮೂಲಗಳು ತಿಳಿಸಿವೆ. ಕಚೇರಿಯ ಕಂಪ್ಯೂಟರ್ ಹಾರ್ಡ್ ಡಿಸ್ಕ್, ಲಾಗ್ ಬುಕ್ ಹಾಗೂ ನಿಯಮ ಉಲ್ಲಂಘಿಸಿ ಅನುಮೋದನೆ ಪಡೆದುಕೊಂಡಿದ್ದ ನೂರಾರು ಮಹತ್ವದ ಕಡತಗಳನ್ನು ಲೋಕಾಯುಕ್ತ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.&lt;/p&gt;&lt;p&gt;ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಲೋಕಾಯುಕ್ತ ಅಧಿಕಾರಿಗಳು, &quot;ಸಾರ್ವಜನಿಕರ ದೂರುಗಳ ಅನ್ವಯ ಈ ದಿಢೀರ್ ದಾಳಿ ನಡೆಸಲಾಗಿದೆ. ವಶಪಡಿಸಿಕೊಳ್ಳಲಾದ ಎಲ್ಲಾ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಕರ್ತವ್ಯ ಲೋಪ ಎಸಗಿದ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು,&quot; ಎಂದು ಎಚ್ಚರಿಸಿದ್ದಾರೆ.&lt;/p&gt;&lt;p&gt;ಲೋಕಾಯುಕ್ತರ ಈ ದಿಢೀರ್ ಭೇಟಿಯಿಂದಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಭ್ರಷ್ಟ ಅಧಿಕಾರಿಗಳು ಹಾಗೂ ಲಂಚದ ದಂಧೆಯಲ್ಲಿ ತೊಡಗಿದ್ದ ಮಧ್ಯವರ್ತಿಗಳಲ್ಲಿ ನಡುಕ ಹುಟ್ಟಿದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/lokayukta-raids-ballari-city-corporation-over-massive-illegal-b-khata-and-form-2-property-scam-gdp/articleshow-d7un96t"/>
        </item>
        <item>
            <title><![CDATA[ಕೊಲ್ಲಿ ಯುದ್ಧದಿಂದ ಡಾಂಬರ್‌ ದರ ದುಪ್ಪಟ್ಟು ದುಬಾರಿ: ಕರ್ನಾಟಕದ ಹಲವು ಕಡೆ ರಸ್ತೆ ಕೆಲಸ ಸ್ಥಗಿತ]]></title>
            <link>https://kannada.asianetnews.com/gallery/state/middle-east-conflict-hits-karnataka-roads-bitumen-prices-skyrocket-to-rs1lakh-ton-halting-projects-gdp-dlw3a39</link>
            <guid isPermaLink="true">https://kannada.asianetnews.com/gallery/state/middle-east-conflict-hits-karnataka-roads-bitumen-prices-skyrocket-to-rs1lakh-ton-halting-projects-gdp-dlw3a39</guid>
            <pubDate>Mon, 15 Jun 2026 16:29:11 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಡಾಂಬರ್ ಬೆಲೆ ಪ್ರತಿ ಟನ್&zwnj;ಗೆ ₹45 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ಹೂವಿನಹಡಗಲಿ ತಾಲೂಕಿನ ಹಲವು ರಸ್ತೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ, ಗುತ್ತಿಗೆದಾರರು ಜೆಲ್ಲಿಕಲ್ಲು ಹಾಕಿ ಕಾಮಗಾರಿ ನಿಲ್ಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv5dymax9871aah463jzv40h,imgname-roads-bitumen-prices-1781520093533.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಡಾಂಬರ್ ಬೆಲೆ ಪ್ರತಿ ಟನ್&zwnj;ಗೆ ₹45 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ಹೂವಿನಹಡಗಲಿ ತಾಲೂಕಿನ ಹಲವು ರಸ್ತೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ, ಗುತ್ತಿಗೆದಾರರು ಜೆಲ್ಲಿಕಲ್ಲು ಹಾಕಿ ಕಾಮಗಾರಿ ನಿಲ್ಲಿಸಿದ್ದಾರೆ.&lt;/p&gt;&lt;img&gt;&lt;p&gt;ವರದಿ: ಚಂದ್ರು ಕೊಂಚಿಗೇರಿ&lt;/p&gt;&lt;p&gt;ಹೂವಿನಹಡಗಲಿ: ಮಧ್ಯಪ್ರಾಚ್ಯದ ಯುದ್ಧದ ಈಗ ರಸ್ತೆ ಮೇಲೂ ಪರಿಣಾಮ ಬೀರಿದೆ. ಪ್ರತಿ ಟನ್&zwnj; ಡಾಂಬರ್&zwnj; ಬೆಲೆ ₹45 ಸಾವಿರದಿಂದ ₹ 1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ರಸ್ತೆ ಅಭಿವೃದ್ಧಿಗೂ ಕುತ್ತು ಬಂದಿದೆ. ಟೆಂಡರ್&zwnj; ಪಡೆದ ಗುತ್ತಿಗೆದಾರರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಯುದ್ಧಕ್ಕೂ ಮುನ್ನವೇ ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರರು ಒಪ್ಪಂದದ ಪ್ರಕಾರ ವಿಧಿ ಇಲ್ಲದೇ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಈಗ ಡಾಂಬರ್&zwnj; ಖರೀದಿಸಲು ಹೋದರೆ ಸಿಕ್ಕಾಪಟ್ಟೆ ಬೆಲೆ ಏರಿಕೆಯಾಗಿದೆ. ಇನ್ನು ಸ್ವಲ್ಪ ದಿನ ತಡೆದರೆ ಬೆಲೆ ಇಳಿಕೆ ಆಗಬಹುದು ಎಂಬ ನಿರೀಕ್ಷೆಯಲ್ಲಿರುವ ಗುತ್ತಿಗೆದಾರರು, ಹೂವಿನಹಡಗಲಿಯ ಹಲವು ರಸ್ತೆಗಳ ಮೇಲೆ ಜೆಲ್ಲಿ ಕಲ್ಲು ಹಾಕಿ ಬಿಟ್ಟಿದ್ದಾರೆ.&lt;/p&gt;&lt;img&gt;&lt;p&gt;ಹೌದು, ತಾಲೂಕಿನ ಮೈಲಾರ-ತೋರಣಗಲ್ಲು, ಅರಭಾವಿ-ಚಳಕೇರಿ ರಾಜ್ಯ ಹೆದ್ದಾರಿ ಸೇರಿದಂತೆ ಇನ್ನಿತರ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಟೆಂಡರ್&zwnj; ಕರೆದು, ಕಾಮಗಾರಿ ಆದೇಶ ನೀಡಿದೆ. ಗುತ್ತಿಗೆದಾರರು ಟೆಂಡರ್&zwnj; ನಿಯಮಗಳಂತೆ ಕಾಮಗಾರಿ ಆರಂಭಿಸಿ, ರಸ್ತೆಗೆ ಇನ್ನು ಡಾಂಬರೀಕರಣ ಹಾಕಬೇಕು ಎನ್ನುವಷ್ಟರಲ್ಲಿ ಮಧ್ಯಪ್ರಾಚ್ಯ ಯುದ್ಧ ಶುರುವಾಗಿತ್ತು. ಇದರ ಪರಿಣಾಮದಿಂದ ಡಾಂಬರ್&zwnj; ಬೆಲೆ ಗಗನಕ್ಕೇರಿದೆ. ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯನ್ನು ಆಯ್ದ ಮೂರು ಕಡೆಗಳಲ್ಲಿ ಹಾಳಾಗಿರುವ ರಸ್ತೆಯನ್ನು ಅಭಿವೃದ್ಧಿ ಮಾಡುತ್ತಿದ್ದಾರೆ. ಕಲ್ಲಿನ ಪುಡಿ ಮಿಶ್ರಿತ ಜೆಲ್ಲಿ ಕಲ್ಲು ಹಾಕಿದ್ದಾರೆ. ವಾಹನಗಳ ಓಡಾಟದಿಂದ ರಸ್ತೆಗೆ ಹಾಕಿದ್ದ ಜೆಲ್ಲಿ ಕಲ್ಲು ಕಿತ್ತು ಹೋಗುತ್ತಿವೆ. ಜತೆಗೆ ರಸ್ತೆ ತುಂಬೆಲ್ಲ ಧೂಳು ಎಗರುತ್ತಿದೆ. ದೊಡ್ಡ ವಾಹನಗಳ ಹಿಂದೆ ಬೈಕ್&zwnj; ಸವಾರರು ಧೂಳು ಮೆತ್ತಿಕೊಂಡು ಹೋಗುವ ಸ್ಥಿತಿ ಇದೆ.&lt;/p&gt;&lt;img&gt;&lt;p&gt;ತಾಲೂಕಿನ ಉತ್ತಂಗಿ ಬಳಿ ಅರಭಾವಿ-ಚಳಕೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ನಡೆಯುತ್ತಿದೆ. ರಸ್ತೆಗೆ ಜೆಲ್ಲಿಕಲ್ಲು ಹಾಕಿದ್ದಾರೆ. ಸಾಕಷ್ಟು ಕಡೆ ಕಲ್ಲು ಕಿತ್ತು ಹೋಗಿ ಗುಂಡಿಗಳಾಗಿವೆ. ಕಾಮಗಾರಿ ಪ್ರಗತಿಯಲ್ಲಿ ಇರುವಾಗಲೇ ರಸ್ತೆ ಕಿತ್ತು ಹೋಗಿದೆ. ಈ ರಾಜ್ಯ ಹೆದ್ದಾರಿಯಲ್ಲಿ ಒಂದೇ ತಿಂಗಳಿನಲ್ಲಿ ಮೂರು ರಸ್ತೆ ಅಪಘಾತಗಳು ಉಂಟಾಗಿವೆ. ತಾಲೂಕಿನಲ್ಲಿ ಒಟ್ಟಾರೆ 10 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಎಲ್ಲ ಕಡೆಗೂ ಪರಿಸ್ಥಿತಿ ಹೀಗೆ ಇದೆ. ರಸ್ತೆ ಧೂಳು ಮುಕ್ತ ಮಾಡಲು ತಿಳಿದಾಗೊಮ್ಮೆ ನೀರು ಸಿಂಪರಣೆ ಮಾಡುತ್ತಾರೆ.&lt;/p&gt;&lt;p&gt;&lt;strong&gt;ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಡಾಂಬರ್&zwnj; ಬೆಲೆ ಏರಿಕೆಯಿಂದ ಗುತ್ತಿಗೆದಾರರಿಗೆ ತೊಂದರೆಯಾಗಿದೆ. ಅಗ್ರಿಮೆಂಟ್&zwnj; ಪ್ರಕಾರ ಅವರೇ ಕೆಲಸ ಪೂರ್ಣಗೊಳಿಸಬೇಕು. ಧೂಳು ಮುಕ್ತ ಮಾಡಲು ನೀರು ಸಿಂಪರಣೆ ಮಾಡಲಾಗುತ್ತಿದೆ.&lt;/strong&gt;&lt;/p&gt;&lt;p&gt;&lt;strong&gt;-ನಾಗೇಶ, ಲೋಕೋಪಯೋಗಿ ಇಲಾಖೆಯ ಎಇಇ&lt;/strong&gt;&lt;/p&gt;&lt;img&gt;&lt;p&gt;ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಗೆ ಕಲ್ಲಿನ ಪುಡಿ, ಜೆಲ್ಲಿ ಕಲ್ಲು ಹಾಕಿದ್ದಾರೆ. ಮೈಲಾರಕ್ಕೆ ಬರುವ ಭಕ್ತರು ಧೂಳು ಮೆತ್ತಿಕೊಂಡೇ ಬರುತ್ತಾರೆ. ದೊಡ್ಡ ವಾಹನದ ಹಿಂದೆ ಹೋದರೆ ದಾರಿಯೇ ಕಾಣುತ್ತಿಲ್ಲ. ಅಷ್ಟೊಂದು ಧೂಳು ಇದೆ. ಸಂಬಂಧ ಪಟ್ಟವರು ಬೇಗನೆ ಕಾಮಗಾರಿ ಪೂರ್ಣಗೊಳಿಸಲಿ.&lt;/p&gt;&lt;p&gt;-ಮೈಲಾರ ಗ್ರಾಮಸ್ಥರು.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/middle-east-conflict-hits-karnataka-roads-bitumen-prices-skyrocket-to-rs1lakh-ton-halting-projects-gdp-dlw3a39"/>
        </item>
        <item>
            <title><![CDATA[Ballari News: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿ ರೇಣುಕಾಸ್ವಾಮಿಯಂತೆ ಕಾಲುವೆ ಪಕ್ಕದಲ್ಲಿ ಬೀದಿ ಹೆಣವಾದ ಬಸವನಗೌಡ!]]></title>
            <link>https://kannada.asianetnews.com/gallery/karnataka-districts/ballari-moka-police-arrest-shweta-husband-for-burning-man-body-like-renukaswamy-case-fpgo6bb</link>
            <guid isPermaLink="true">https://kannada.asianetnews.com/gallery/karnataka-districts/ballari-moka-police-arrest-shweta-husband-for-burning-man-body-like-renukaswamy-case-fpgo6bb</guid>
            <pubDate>Sun, 14 Jun 2026 20:37:00 +0530</pubDate>
            <description><![CDATA[&lt;p&gt;ಬಳ್ಳಾರಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು, ಆ ಮಹಿಳೆ ತನ್ನ ಪತಿ ಮತ್ತು ಸಹೋದರನೊಂದಿಗೆ ಸೇರಿ ಹತ್ಯೆ ಮಾಡಿದ್ದಾಳೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆಯೇ ಇರುವ ಈ ಘಟನೆಯಲ್ಲಿ, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv3ab3krtp04w293wgyh6h1j,imgname-ballari-basavanagowda-murder-1781449199223.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಳ್ಳಾರಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು, ಆ ಮಹಿಳೆ ತನ್ನ ಪತಿ ಮತ್ತು ಸಹೋದರನೊಂದಿಗೆ ಸೇರಿ ಹತ್ಯೆ ಮಾಡಿದ್ದಾಳೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆಯೇ ಇರುವ ಈ ಘಟನೆಯಲ್ಲಿ, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಡಲಾಗಿದೆ.&lt;/p&gt;&lt;img&gt;&lt;p&gt;ಬಳ್ಳಾರಿ (ಜೂ.14):ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ನಟ ದರ್ಶನ್ ಮತ್ತು ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಬಳ್ಳಾರಿಯಲ್ಲಿ ಅಂತಹದ್ದೇ ಒಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಆಕೆ ತನ್ನ ಪತಿ ಮತ್ತು ಸೋದರನ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ಸುಟ್ಟಿರುವ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/p&gt;&lt;p&gt;ಖಾಸಗಿ ಲ್ಯಾಬ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪಾಟೀಲ್ ಬಸವನಗೌಡ (26) ಎಂಬ ಯುವಕ ಜೂನ್ 7ರಂದು ನಾಪತ್ತೆಯಾಗಿದ್ದನು. ಮರುದಿನ ಬೆಳಿಗ್ಗೆ ಎಲ್&zwnj;ಎಲ್&zwnj;ಸಿ (LLC) ಕಾಲುವೆಯ ನಿರ್ಜನ ಪ್ರದೇಶದಲ್ಲಿ ಈತನ ಮೃತದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಮೋಕಾ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಾಗ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ.&lt;/p&gt;&lt;img&gt;&lt;p&gt;&lt;strong&gt;ಅಶ್ಲೀಲ ಸಂದೇಶವೇ ಸಾವಿಗೆ ಮುನ್ನುಡಿ:&lt;/strong&gt;&lt;/p&gt;&lt;p&gt;ಕೊಲೆಯಾದ ಬಸವನಗೌಡನಿಗೆ ದೂರದ ಸಂಬಂಧದಲ್ಲಿ ಅತ್ತಿಗೆಯಾಗುವ ಶ್ವೇತಾ ಎಂಬಾಕೆಯ ಪರಿಚಯವಿತ್ತು. ಸುಮಾರು ಎರಡು ವರ್ಷಗಳ ಹಿಂದೆ ಮದುವೆಯೊಂದರಲ್ಲಿ ಪರಿಚಯವಾಗಿದ್ದ ಇವರಿಬ್ಬರ ನಡುವೆ ಮಾತುಕತೆ ನಡೆದಿತ್ತು. ಆದರೆ, ಬಸವನಗೌಡ ಇದನ್ನು ತಪ್ಪಾಗಿ ಬಳಸಿಕೊಂಡಿದ್ದನು.&lt;/p&gt;&lt;img&gt;&lt;p&gt;ಕಳೆದ ಒಂದು ವರ್ಷದಿಂದ ಶ್ವೇತಾಗೆ ಅಶ್ಲೀಲ ಫೋಟೋಗಳು ಮತ್ತು ವಿಕೃತ ಸಂದೇಶಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದನು. ತನ್ನ ಕಾಮದ ತೃಷೆ ತೀರಿಸಿಕೊಳ್ಳಲು ಶ್ವೇತಾಗೆ ನಿರಂತರವಾಗಿ ಪೀಡಿಸುತ್ತಿದ್ದನು ಎಂದು ಹೇಳಲಾಗಿದೆ.&lt;/p&gt;&lt;img&gt;&lt;p&gt;&lt;strong&gt;ಹತ್ಯೆಯ ಸ್ಕೆಚ್ ಮತ್ತು ಮೃತದೇಹ ದಹನ:&lt;/strong&gt;&lt;/p&gt;&lt;p&gt;ಬಸವನಗೌಡನ ಅತಿಯಾದ ಕಿರುಕುಳದಿಂದ ಬೇಸತ್ತ ಶ್ವೇತಾ, ಈ ವಿಷಯವನ್ನು ತನ್ನ ಪತಿ ದೊಡ್ಡಬಸವನಗೌಡ ಹಾಗೂ ಸೋದರ ವಿಜಯ್&zwnj;ಗೆ ತಿಳಿಸಿದ್ದಳು. ಇವನ ಕಾಟಕ್ಕೆ ಮುಕ್ತಿ ಹಾಡಲೇಬೇಕು ಎಂದು ನಿರ್ಧರಿಸಿದ ಮೂವರು ಹತ್ಯೆಗೆ ಸಂಚು ರೂಪಿಸಿದ್ದರು. ಜೂನ್ 7ರಂದು ಶ್ವೇತಾ ತಾನೇ ಕರೆ ಮಾಡಿ ಬಸವನಗೌಡನನ್ನು ನಿರ್ಜನ ಪ್ರದೇಶಕ್ಕೆ ಬರುವಂತೆ ಮಾಡಿದ್ದಾಳೆ. ಅಲ್ಲಿ ಬಂದ ಬಸವನಗೌಡನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಹತ್ತು ಕಿಲೋಮೀಟರ್ ದೂರದ ಕಾಲುವೆಯ ಪಕ್ಕಕ್ಕೆ ಸಾಗಿಸಿ, ಅಲ್ಲಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು.&lt;/p&gt;&lt;img&gt;&lt;p&gt;&lt;strong&gt;ಪೊಲೀಸರ ಬಲೆಗೆ ಬಿದ್ದ ಆರೋಪಿಗಳು:&lt;/strong&gt;&lt;/p&gt;&lt;p&gt;ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹವನ್ನು ಪತ್ತೆಹಚ್ಚಿದ ಮೋಕಾ ಠಾಣೆ ಪೊಲೀಸರು, ಮೊಬೈಲ್ ಕರೆಗಳ ವಿವರ (CDR) ಆಧಾರದ ಮೇಲೆ ತನಿಖೆ ನಡೆಸಿ ಶ್ವೇತಾ, ಆಕೆಯ ಪತಿ ಮತ್ತು ಸೋದರನನ್ನು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೊಲೆಯಾಗಿರುವ ರೀತಿಯಲ್ಲಿಯೇ, ಇಲ್ಲಿಯೂ ಕೂಡ ಮಹಿಳೆಯ ಕಿರುಕುಳದ ದೂರು ಕೊಲೆಯಲ್ಲಿ ಅಂತ್ಯವಾಗಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.&lt;/p&gt;]]></content:encoded>
            <category>ballari</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/ballari-moka-police-arrest-shweta-husband-for-burning-man-body-like-renukaswamy-case-fpgo6bb"/>
        </item>
        <item>
            <title><![CDATA[Football: ಗ್ರಾಮೀಣ ಫುಟ್ಬಾಲ್ ಪ್ರತಿಭೆಗಳಿಗೆ ಸ್ಥಾಪಿಸಿದ್ದ ಬಳ್ಳಾರಿ ಕ್ರೀಡಾ ವಸತಿ ನಿಲಯ ಬೆಂಗಳೂರಿಗೆ ಶಿಫ್ಟ್!]]></title>
            <link>https://kannada.asianetnews.com/sports/bellary-football-dormitory-shift-to-bengaluru-kalyana-karnataka-students-outraged-rav/articleshow-gmovt3y</link>
            <guid isPermaLink="true">https://kannada.asianetnews.com/sports/bellary-football-dormitory-shift-to-bengaluru-kalyana-karnataka-students-outraged-rav/articleshow-gmovt3y</guid>
            <pubDate>Sat, 13 Jun 2026 12:14:04 +0530</pubDate>
            <description><![CDATA[ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಬಳ್ಳಾರಿಯ ಹಿರಿಯರ ಫುಟ್&zwnj;ಬಾಲ್ ಕ್ರೀಡಾ ವಸತಿ ನಿಲಯವನ್ನು ಏಕಾಏಕಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ನಿರ್ಧಾರವು ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಮತ್ತು ಬಡ ಕ್ರೀಡಾಪಟುಗಳ ಭವಿಷ್ಯಕ್ಕೆ ಕುತ್ತು ತಂದಿದ್ದು, ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktzvct0bgm0bmmcvz98r4k80,imgname-----------------------2026-06-13t115251.037-1781332862987.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;ಬಳ್ಳಾರಿ (ಜೂ.13): ರಾಜ್ಯ, ರಾಷ್ಟ್ರಮಟ್ಟದ ಫುಟ್&zwnj;ಬಾಲ್ ಕ್ರೀಡೆಯಲ್ಲಿ ನಿರಂತರ ಸಾಧನೆ ಮೂಲಕ ಉತ್ತರ ಕರ್ನಾಟಕ(north Karnataka), ಕಲ್ಯಾಣ ಕರ್ನಾಟಕ(Kalyana karnataka) ಭಾಗಕ್ಕೆ ಹೆಮ್ಮೆ ತಂದಿರುವ ಬಳ್ಳಾರಿ(Ballari)ಯ ಹಿರಿಯರ ಫುಟ್&zwnj;ಬಾಲ್ ಕ್ರೀಡಾ ವಸತಿ ನಿಲಯವನ್ನು ಏಕಾಏಕಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಸ್ಥಳೀಯ ಕ್ರೀಡಾಪ್ರೇಮಿಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;ಬಳ್ಳಾರಿಯ ಫುಟ್&zwnj;ಬಾಲ್ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ವಿದ್ಯಾನಗರದಲ್ಲಿರುವ ಕ್ರೀಡಾ ವಸತಿ ಶಾಲೆಗೆ ಪ್ರವೇಶ ಪಡೆದುಕೊಳ್ಳುವಂತೆ ಕ್ರೀಡಾ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಇದು ವಿದ್ಯಾರ್ಥಿಗಳಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ.&lt;/p&gt;&lt;h2&gt;ಸ್ಥಳಾಂತರ ಏಕೆ?&lt;/h2&gt;&lt;p&gt;ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಫುಟ್&zwnj;ಬಾಲ್ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ 2018ರಲ್ಲಿ ಬಳ್ಳಾರಿಯ ರೇಡಿಯೋ ಪಾರ್ಕ್ ಪ್ರದೇಶದಲ್ಲಿ ಕ್ರೀಡಾ ವಸತಿ ನಿಲಯವನ್ನು ಆರಂಭಿಸಲಾಗಿತ್ತು. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಬಳ್ಳಾರಿಯಲ್ಲಿ ಕ್ರೀಡಾ ವಸತಿ ಕೇಂದ್ರವಿತ್ತು. ಪದವಿಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶವಿತ್ತು. ಕಳೆದ ಎಂಟು ವರ್ಷಗಳಲ್ಲಿ ಈ ಕೇಂದ್ರವು ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ರೂಪಿಸಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದೆ.&lt;/p&gt;&lt;p&gt;ವಸತಿ ನಿಲಯದ ತಂಡವು ವಿವಿಧ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ 5 ಚಿನ್ನ, 2 ಬೆಳ್ಳಿ ಪದಕಗಳನ್ನು ಗೆದ್ದಿದೆ. ಕರ್ನಾಟಕ ರಾಜ್ಯ ಫುಟ್&zwnj;ಬಾಲ್ ಸಂಸ್ಥೆ (ಕೆಎಸ್&zwnj;ಎಫ್&zwnj;ಎ) ಆಶ್ರಯದಲ್ಲಿ ನಡೆದ ಪಂದ್ಯಾವಳಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 'ಬಿ'ವಿಭಾಗದಿಂದ ಪ್ರತಿಷ್ಠಿತ 'ಎ ' ವಿಭಾಗಕ್ಕೆ ಪದೋನ್ನತಿ ಹೊಂದಿರುವುದು ಇದರ ಸಾಧನೆಗೆ ಸಾಕ್ಷಿಯಾಗಿದೆ. ಇಲ್ಲಿನ ಕ್ರೀಡಾಪಟುಗಳು ಖೇಲೋ ಇಂಡಿಯಾ ಯೂತ್ ಗೇಮ್ಸ್ (ಯು-20), ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಫುಟ್&zwnj;ಬಾಲ್ ಚಾಂಪಿಯನ್&zwnj;ಶಿಪ್, ಆಲ್ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಸೇರಿದಂತೆ ಹಲವು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಷ್ಟಾಗಿಯೂ ಕ್ರೀಡಾ ವಸತಿ ನಿಲಯವನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.&lt;/p&gt;&lt;h3&gt;ನಿಷ್ಕಾಳಜಿಯೂ ಕಾರಣ:&lt;/h3&gt;&lt;p&gt;ಕ್ರೀಡಾ ವಸತಿ ಕೇಂದ್ರ ಬಲಪಡಿಸುವ ಬದಲು ಸ್ಥಳಾಂತರಕ್ಕೆ ಮುಂದಾಗಿರುವ ಕ್ರೀಡಾ ಇಲಾಖೆಯ ಕಾರ್ಯವೈಖರಿ ತೀವ್ರ ಟೀಕೆಗೆ ಗುರಿಯಾಗಿದೆ. ಈ ಬಗ್ಗೆ ಧ್ವನಿ ಎತ್ತದ ಜಿಲ್ಲೆಯ ಜನಪ್ರತಿನಿಧಿಗಳ ನಿಷ್ಕಾಳಜಿಯೇ ಇದಕ್ಕೆ ಕಾರಣ ಎಂದು ಜನಾಕ್ರೋಶ ವ್ಯಕ್ತವಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ಇತರ ಹಿಂದುಳಿದ ಜಿಲ್ಲೆಗಳ ಗ್ರಾಮೀಣ ಯುವಕರಿಗೆ ಈ ಕೇಂದ್ರ ಸುಲಭವಾಗಿ ತಲುಪಬಹುದಾದ ತರಬೇತಿ ತಾಣವಾಗಿತ್ತು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಲ್ಲಿ ತರಬೇತಿ ಪಡೆದು ತಮ್ಮ ಪ್ರತಿಭೆ ಬೆಳೆಸಿಕೊಳ್ಳುತ್ತಿದ್ದರು. ಬೆಂಗಳೂರು ಮಾದರಿಯ ಮಹಾನಗರದಲ್ಲಿ ವಾಸ, ಪ್ರಯಾಣ, ಇತರ ವೆಚ್ಚಗಳನ್ನು ಭರಿಸುವುದು ಗ್ರಾಮೀಣ ಬಡ ಕುಟುಂಬಗಳಿಗೆ ಕಷ್ಟಸಾಧ್ಯ. ಇದರಿಂದ ಅನೇಕ ಪ್ರತಿಭೆಗಳು ಆರಂಭದಲ್ಲೇ ಕ್ರೀಡಾ ಕ್ಷೇತ್ರದಿಂದ ದೂರ ಉಳಿಯುವ ಸಾಧ್ಯತೆ ಇದೆ. ಕ್ರೀಡಾ ಅವಕಾಶಗಳ ವಿಕೇಂದ್ರೀಕರಣದ ಬದಲು ಎಲ್ಲ ಸೌಲಭ್ಯಗಳನ್ನು ರಾಜಧಾನಿಗೆ ಕೇಂದ್ರೀಕರಿಸುವ ಕ್ರಮವು ಪ್ರಾದೇಶಿಕ ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಜಿಲ್ಲೆಗೆ ಅನ್ಯಾಯವಾಗುತ್ತಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ? ಇವರಿಗೆ ಜಿಲ್ಲೆಯ ಕ್ರೀಡಾಪಟುಗಳಿಗೆ ಕಾಳಜಿ ಇಲ್ಲವೇ? ಎಂದು ಸ್ಥಳೀಯ ಯುವ ಕ್ರೀಡಾಪಟುಗಳಾದ ಸೂರಜಕುಮಾರ್, ರಾಜೇಶ್ ಪ್ರಶ್ನಿಸುತ್ತಾರೆ.&lt;/p&gt;&lt;p&gt;ಜಿಲ್ಲೆಯ ಜನಪ್ರತಿನಿಧಿಗಳು, ಕ್ರೀಡಾಭಿಮಾನಿಗಳು, ವಿವಿಧ ಸಂಘಟನೆಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರೀಡಾಪಟುಗಳ ಭವಿಷ್ಯದ ಹಿತದೃಷ್ಟಿಯಿಂದ ಫುಟ್&zwnj;ಬಾಲ್ ಕ್ರೀಡಾ ವಸತಿ ನಿಲಯವನ್ನು ಬಳ್ಳಾರಿಯಲ್ಲಿಯೇ ಮುಂದುವರಿಸುವ ಕುರಿತು ಪೂರಕ ಕ್ರಮ ವಹಿಸಬೇಕಾಗಿದೆ.&lt;/p&gt;&lt;p&gt;ಫುಟ್&zwnj;ಬಾಲ್ ಕ್ರೀಡಾ ವಸತಿ ನಿಲಯ ಬೆಂಗಳೂರಿಗೆ ಸ್ಥಳಾಂತರಗೊಳಿಸಿರುವ ನಿಲುವಿನಿಂದ ಈ ಭಾಗದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎನ್ನುತ್ತಾರೆ ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಆರ್&zwnj;. ಸಂತೋಷ್&zwnj; ರೆಡ್ಡಿ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/sports/bellary-football-dormitory-shift-to-bengaluru-kalyana-karnataka-students-outraged-rav/articleshow-gmovt3y"/>
        </item>
        <item>
            <title><![CDATA[Vijayanagara: ಧರ್ಮಸಾಗರದಲ್ಲಿ ಅಪರೂಪದ ಕಪ್ಪು ಕಲ್ಲಿನ ಶಾಸನ ಪತ್ತೆ, ಆದಿಮಾನವರ ವಾಸಸ್ಥಾನದ ಕುರುಹು ಪತ್ತೆ!]]></title>
            <link>https://kannada.asianetnews.com/karnataka-districts/vijayanagara-inscription-and-prehistoric-stone-axes-discovered-in-hosapete-dharmasagara-gdp/articleshow-ioh5pm3</link>
            <guid isPermaLink="true">https://kannada.asianetnews.com/karnataka-districts/vijayanagara-inscription-and-prehistoric-stone-axes-discovered-in-hosapete-dharmasagara-gdp/articleshow-ioh5pm3</guid>
            <pubDate>Sat, 27 Jun 2026 17:32:56 +0530</pubDate>
            <description><![CDATA[ಹೊಸಪೇಟೆಯ ಧರ್ಮಸಾಗರ ಗ್ರಾಮದಲ್ಲಿ ಸಂಶೋಧನಾ ತಂಡವೊಂದು ಅಪರೂಪದ ಕಪ್ಪು ಕಲ್ಲಿನ ಶಿಲಾಶಾಸನ, ಆದಿಮಾನವರು ಬಳಸುತ್ತಿದ್ದ ಕಲ್ಲುಗೊಡಲಿಗಳು ಮತ್ತು 101 ಲಿಂಗಗಳಿರುವ ವಿಶಿಷ್ಟ ಗುಡಿಯನ್ನು ಪತ್ತೆಹಚ್ಚಿದೆ. ಈ ಅನ್ವೇಷಣೆಯು ವಿಜಯನಗರ ಕಾಲದ ಇತಿಹಾಸ ಮತ್ತು ಪ್ರಾಗೈತಿಹಾಸಿಕ ಕುರುಹುಗಳ ಮೇಲೆ ಹೊಸ ಬೆಳಕು ಚೆಲ್ಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw4f9zpp7zkb7bhc4xxpg44s,imgname-vijayanagara-inscription-1782561701590.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಪೇಟೆ:&lt;/strong&gt; ಜಿಲ್ಲೆಯ ಐತಿಹಾಸಿಕ ಶ್ರೀಮಂತಿಕೆಗೆ ಮತ್ತೊಂದು ಗರಿ ಎಂಬಂತೆ, ಹೊಸಪೇಟೆಯಿಂದ ಬಳ್ಳಾರಿಗೆ ಹಾದು ಹೋಗುವ ಮಾರ್ಗದಲ್ಲಿರುವ ಧರ್ಮಸಾಗರ ಗ್ರಾಮದಲ್ಲಿ ಅಪರೂಪದ ಕಪ್ಪು ಕಲ್ಲಿನ ಶಿಲಾಶಾಸನವೊಂದು ಪತ್ತೆಯಾಗಿದೆ. ಈ ಗ್ರಾಮವು ಕೇವಲ ಐತಿಹಾಸಿಕ ತಾಣವಷ್ಟೇ ಅಲ್ಲದೆ, ಆದಿಮಾನವನು ಇಲ್ಲಿ ವಾಸವಿದ್ದನು ಎನ್ನುವುದಕ್ಕೆ ಸ್ಪಷ್ಟ ಕುರುಹುಗಳನ್ನು ಒದಗಿಸುವ ಮೂಲಕ ಸಂಶೋಧಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.&lt;/p&gt;&lt;p&gt;ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ 'ವಿಜಯನಗರ ತಿರುಗಾಟ ಸಂಶೋಧನ ತಂಡ'ವು ಧರ್ಮಸಾಗರ ಗ್ರಾಮದ ನಿವಾಸಿ ಶಂಕರ ಅವರ ನೆರವಿನೊಂದಿಗೆ ನಡೆಸಿದ ಕ್ಷೇತ್ರಕಾರ್ಯದ ವೇಳೆ ಈ ಮಹತ್ವದ ಅನ್ವೇಷಣೆ ಬೆಳಕಿಗೆ ಬಂದಿದೆ.&lt;/p&gt;&lt;p&gt;ವಿಜಯನಗರ ಕಾಲದ ಐತಿಹಾಸಿಕ ಹಿನ್ನೆಲೆ ಮತ್ತು ದಾನಶಾಸನಗಳು ಧರ್ಮಸಾಗರ ಗ್ರಾಮದ ಪಕ್ಕದಲ್ಲೇ ಇರುವ ಪಾಪಿನಾಯಕನಹಳ್ಳಿಯನ್ನು ವಿಜಯನಗರದ ಕಾಲಾವಧಿಯಲ್ಲಿ 'ಪಾಪನಾಯಕ' ಎಂಬ ಪಾಳೆಯಗಾರ ಆಳುತ್ತಿದ್ದನು ಎಂಬ ಮಾಹಿತಿ ಲಭ್ಯವಿದೆ. ಇದಕ್ಕೆ ಪೂರಕವಾಗಿ ಆ ಗ್ರಾಮದ ಚಾವಡಿಯ ಬಳಿ ಹಾಗೂ ಹೊರವಲಯದ ಅಂಕಾಲಮ್ಮ ದೇಗುಲದ ಕಂಬದ ಮೇಲಿರುವ ಶಿಲಾಶಾಸನಗಳು ಸಾಕ್ಷ್ಯ ನುಡಿಯುತ್ತವೆ.&lt;/p&gt;&lt;p&gt;ಇದರೊಂದಿಗೆ, ಸಮೀಪದ ಬೈಲುವದ್ದಿಗೆರೆ ಗ್ರಾಮದ ಆಂಜನೇಯ ದೇಗುಲದ ಬಳಿ ಪತ್ತೆಯಾಗಿರುವ ಗ್ರಾನೈಟ್ ಕಲ್ಲಿನ ಶಾಸನವು ವಿಜಯನಗರ ಸಾಮ್ರಾಜ್ಯದ ಇಮ್ಮಡಿ ದೇವರಾಯನ ಕಾಲದ್ದಾಗಿದೆ. ಇಮ್ಮಡಿ ದೇವರಾಯನ ಪತ್ನಿ ಅಟಣಲಾದೇವಿಯ ನೆನಪಿಗಾಗಿ 'ಅಂಣಲಾಪುರ' ಎಂಬ ಊರನ್ನು ಹಿತ್ತಿಲ ಬಾಗಿಲ ಮಲ್ಲದೇವರು ನಿರ್ಮಿಸಿ, ಆತನ ಹೆಸರಲ್ಲೇ ದಾನ ನೀಡಿದ ವಿವರಗಳು ಈ ಅಪ್ರಕಟಿತ ಶಾಸನದಲ್ಲಿವೆ.&lt;/p&gt;&lt;h2&gt;&lt;strong&gt;ಭಾಷಾ ಸಾಮರಸ್ಯಕ್ಕೆ ಸಾಕ್ಷಿ:&lt;/strong&gt;&lt;/h2&gt;&lt;p&gt;&lt;strong&gt;&amp;nbsp;&lt;/strong&gt;ಕೃಷ್ಣದೇವರಾಯನ ಕಾಲದ ಕೆರೆ ಶಾಸನ ಧರ್ಮಸಾಗರ ಗ್ರಾಮದ ಹೊರವಲಯದಲ್ಲಿರುವ ಕೆರೆಯ ಹಾಸು ಬಂಡೆಕಲ್ಲಿನ ಮೇಲೆ ಕೃಷ್ಣದೇವರಾಯನ ಕಾಲದ ಮತ್ತೊಂದು ಪ್ರಕಟಿತ ಶಾಸನವಿದೆ. ಇದು ಕನ್ನಡ ಲಿಪಿಯಲ್ಲಿದ್ದರೂ, ತೆಲುಗು ಮಿಶ್ರಿತ ಭಾಷೆಯಲ್ಲಿದೆ. &quot;ಈ ದಾನಶಾಸನವು ವಿಜಯನಗರದ ಅರಸರು ಕೇವಲ ಒಂದು ಭಾಷೆಗೆ ಸೀಮಿತವಾಗಿರದೆ, ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಿಗೆ ಸಮಾನ ಗೌರವ ನೀಡುತ್ತಿದ್ದರು ಎಂಬುದಕ್ಕೆ ಭದ್ರ ಪುರಾವೆಯಾಗಿದೆ&quot; ಎಂದು ಸಂಶೋಧನ ತಂಡದ ಪ್ರಮುಖರಾದ ಪ್ರೊ. ತಿಪ್ಪೇಸ್ವಾಮಿ ಎಚ್. ತಿಳಿಸಿದ್ದಾರೆ.&lt;/p&gt;&lt;p&gt;'ಕರೆಕಲ್ಲು ಮಾಗಣಿ' ಮತ್ತು ಆದಿಮಾನವರ ಕಾಲದ ಕಲ್ಲುಗೊಡಲಿಗಳು ಧರ್ಮಸಾಗರದಲ್ಲಿ ಆದಿಮಾನವನು ನೆಲೆಸಿದ್ದಕ್ಕೆ ಸಾಕ್ಷಿಯಾಗಿ ತಜ್ಞರು ಇಲ್ಲಿನ ಗುಡ್ಡದ ಮೆಟ್ಟಿಲು ಕಲ್ಲುಗಳ ರಚನೆಯನ್ನು ಗುರುತಿಸಿದ್ದಾರೆ. ಭೂವೈಜ್ಞಾನಿಕವಾಗಿ ಇವುಗಳನ್ನು 'ಡೊಲರೈಟ್ ಡೈಕ್' (ಕಪ್ಪು ಶಿಲೆ) ಮಾದರಿ ಎಂದು ಕರೆಯಲಾಗುತ್ತದೆ.&lt;/p&gt;&lt;p&gt;&lt;strong&gt;ಸ್ಥಳೀಯರ ನಂಬಿಕೆ: &lt;/strong&gt;ಶ್ರೀರಾಮ, ಲಕ್ಷ್ಮಣ ಮತ್ತು ಸೀತೆಯು ವನವಾಸದ ಸಂದರ್ಭದಲ್ಲಿ ಈ ಕಲ್ಲುಗುಡ್ಡದ ಮೇಲೆ ನಡೆದುಕೊಂಡು ಹೋಗಿದ್ದರಿಂದ ಇಲ್ಲಿನ ಕಲ್ಲುಗಳು ಕಪ್ಪಾಗಿವೆ ಎಂಬುದು ಗ್ರಾಮಸ್ಥರ ಗಾಢ ನಂಬಿಕೆಯಾಗಿದೆ. ಹೀಗಾಗಿಯೇ ಈ ಕಪ್ಪು ಗುಂಡುಕಲ್ಲುಗಳ ಸಮೂಹಕ್ಕೆ ಜನರು 'ಕರೆಕಲ್ಲು ಮಾಗಣಿ' ಎಂದು ಕರೆಯುತ್ತಾರೆ.&lt;/p&gt;&lt;p&gt;&lt;strong&gt;ಪುರಾತತ್ವ ಪುರಾವೆ:&lt;/strong&gt; ಕ್ಷೇತ್ರಕಾರ್ಯದ ವೇಳೆ ಇಲ್ಲಿ ಆದಿಮಾನವ ಬಳಸುತ್ತಿದ್ದ ಎನ್ನಲಾದ ಅತ್ಯಂತ ನುಣುಪಾದ ಕೆತ್ತನೆಯುಳ್ಳ ಕಲ್ಲುಗೊಡಲಿಗಳು (Stone Axes) ದೊರೆತಿವೆ.&lt;/p&gt;&lt;p&gt;ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಹಿರಿಯ ಶ್ರೇಣಿ ಪ್ರಾಧ್ಯಾಪಕ ಡಾ. ಗೋವಿಂದ ಅವರ ಪ್ರಕಾರ, &quot;ಸ್ಥಳೀಯರ ಮಾಹಿತಿಯಂತೆ ಈ ಗುಡ್ಡದ ಇಳಿಜಾರಿನಲ್ಲಿ ಹಿಂದೆ 'ಹಳೆ ಊರು' ಇತ್ತು. ಅದಕ್ಕೆ ಪೂರಕವಾಗಿ ಅಲ್ಲಿ ವಾಸದ ಮನೆಗಳ ಹಳೆಯ ತಳಪಾಯದ ರಚನೆಗಳು, ಅನತಿ ದೂರದಲ್ಲೇ ಕೆರೆ ಹಾಗೂ ಕೆರೆಯ ತೂಬುಗಳು ಇಂದಿಗೂ ಕಾಣಸಿಗುತ್ತವೆ. ಆದರೆ, ಪ್ರಸ್ತುತ ಈ ಹಳೆಯ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ&quot; ಎಂದಿದ್ದಾರೆ.&lt;/p&gt;&lt;p&gt;ರಹಸ್ಯಮಯ 101 ಲಿಂಗಗಳ ಗುಡಿ ಗ್ರಾಮದ ಹೊರವಲಯದಲ್ಲಿ ಪೂರ್ವಭಿಮುಖವಾಗಿ ನಿರ್ಮಿಸಲಾದ ಒಂದು ಸಣ್ಣ ವಿಶಿಷ್ಟ ಗುಡಿಯಿದೆ. ಈ ಗರ್ಭಗುಡಿಯ ಗೋಡೆಗೆ ಶಿವಲಿಂಗದ ಆಕಾರ ಹೋಲುವ ಗುಂಡುಕಲ್ಲುಗಳಿವೆ. ಇದರ ಎಡ ಮತ್ತು ಬಲ ಬದಿಯಲ್ಲಿರುವ ಸಣ್ಣ ಹಾಗೂ ದೊಡ್ಡದಾದ ಒಟ್ಟು 101 ಗುಂಡುಕಲ್ಲುಗಳನ್ನೇ ಶಿವಲಿಂಗಗಳೆಂದು ಭಾವಿಸಿ ಇಲ್ಲಿನ ಭಕ್ತರು ಅನಾದಿ ಕಾಲದಿಂದಲೂ ಪೂಜಿಸುತ್ತಾ ಬಂದಿದ್ದಾರೆ. ಪ್ರತಿವರ್ಷ ಮಹಾಶಿವರಾತ್ರಿಯ ಜಾಗರಣೆಯ ದಿನದಂದು ಈ ಗುಡಿಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತವೆ.&lt;/p&gt;&lt;p&gt;&lt;strong&gt;ಸಂಶೋಧಕರ ಅಪೀಲು: &lt;/strong&gt;&quot;ಧರ್ಮಸಾಗರದಲ್ಲಿ ದೊರೆತಿರುವ ಈ ಅಪರೂಪದ ಶಾಸನಗಳು, ಕಲ್ಲುಗೊಡಲಿಗಳು ಹಾಗೂ 101 ಲಿಂಗಗಳ ಗುಡಿಯಂತಹ ಐತಿಹಾಸಿಕ ಮತ್ತು ಪ್ರಾಗೈತಿಹಾಸಿಕ ಸ್ಮಾರಕಗಳನ್ನು ಸಂಬಂಧಪಟ್ಟ ಪುರಾತತ್ವ ಇಲಾಖೆಯು ತಕ್ಷಣವೇ ರಕ್ಷಿಸಬೇಕು. ಇವುಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಸೂಕ್ತ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು&quot; ಎಂದು ಸಂಶೋಧಕ ಡಾ. ಕೃಷ್ಣೇಗೌಡ ಒತ್ತಾಯಿಸಿದ್ದಾರೆ.&lt;/p&gt;&lt;p&gt;ಈ ಯಶಸ್ವಿ ಕ್ಷೇತ್ರಕಾರ್ಯದಲ್ಲಿ ಸಂಶೋಧನ ತಂಡದ ಸದಸ್ಯರಾದ ಪ್ರೊ. ತಿಪ್ಪೇಸ್ವಾಮಿ ಎಚ್, ಡಾ. ಗೋವಿಂದ, ಡಾ. ಕೃಷ್ಣೇಗೌಡ ಹಾಗೂ ಸಂಶೋಧಕರಾದ ಎಚ್. ರವಿ, ಅಶೋಕ್ ನಾಯಕ್ ದಿದ್ದಿಗಿ ಮತ್ತು ಇಸ್ಮಾಯಿಲ್ ಸಿದ್ದಿಕ್ ಪಾಲ್ಗೊಂಡಿದ್ದರು.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/vijayanagara-inscription-and-prehistoric-stone-axes-discovered-in-hosapete-dharmasagara-gdp/articleshow-ioh5pm3"/>
        </item>
        <item>
            <title><![CDATA[Ballari: ರಸ್ತೆ ಕಾಮಗಾರಿ ಗುಂಡಿಗೆ ಬೈಕ್ ಬಿದ್ದು ನರ್ಸ್ ಸಾವು: ಪತಿ ಗಂಭೀರ, ನಿರ್ಲಕ್ಷ್ಯ ಆರೋಪ]]></title>
            <link>https://kannada.asianetnews.com/crime/ballari-road-work-pit-bike-accident-nurse-manjula-death-siruguppa-gvd/articleshow-msq37lg</link>
            <guid isPermaLink="true">https://kannada.asianetnews.com/crime/ballari-road-work-pit-bike-accident-nurse-manjula-death-siruguppa-gvd/articleshow-msq37lg</guid>
            <pubDate>Thu, 04 Jun 2026 21:54:46 +0530</pubDate>
            <description><![CDATA[&lt;p&gt;ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬೈಕ್&zwnj; ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt9q6smqncw0jyynwgh0k7wj,imgname-cxh-1780590274199.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ (ಜೂ.04): &lt;/strong&gt;ರಸ್ತೆ ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬೈಕ್&zwnj; ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್&zwnj; ಸಮೀಪದ ರಾಜ್ಯ ಹೆದ್ದಾರಿ-63ರಲ್ಲಿ ನಡೆದಿದೆ.&lt;/p&gt;&lt;p&gt;ಮೃತರನ್ನು ಮಂಜುಳ (36) ಎಂದು ಗುರುತಿಸಲಾಗಿದ್ದು, ಅವರು ತಾಲೂಕಿನ ರಾವಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪತಿ ಚಂದ್ರಶೇಖರ (46) ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ಜಿಲ್ಲಾ ವಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;p&gt;ಮಾಹಿತಿಯ ಪ್ರಕಾರ, ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ, ಎಚ್ಚರಿಕೆ ಫಲಕಗಳು ಹಾಗೂ ಮಾರ್ಗಸೂಚಿ ಬೋರ್ಡ್&zwnj;ಗಳನ್ನು ಅಳವಡಿಸದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ರಾತ್ರಿ ವೇಳೆ ರಸ್ತೆ ಸ್ಪಷ್ಟವಾಗಿ ಕಾಣದ ಕಾರಣ ಬೈಕ್&zwnj; ಸವಾರರು ಕಾಮಗಾರಿಗಾಗಿ ತೆಗೆಯಲಾಗಿದ್ದ ಗುಂಡಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;&lt;strong&gt;ಪ್ರಕರಣ ದಾಖಲು&lt;/strong&gt;&lt;/h2&gt;&lt;p&gt;ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯರು ಕಾಮಗಾರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>ballari</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/ballari-road-work-pit-bike-accident-nurse-manjula-death-siruguppa-gvd/articleshow-msq37lg"/>
        </item>
        <item>
            <title><![CDATA[ಫೇಸ್-ಲೊಕೇಶನ್ ಹಾಜರಾತಿ ಎಫೆಕ್ಟ್‌: ನಿಗದಿತ ಸಮಯಕ್ಕೆ ಶಾಲೆ ಅಂಗಳದಲ್ಲಿ ಶಿಕ್ಷಕರು ಹಾಜರ್]]></title>
            <link>https://kannada.asianetnews.com/karnataka-districts/ai-based-face-location-attendance-system-effect-teachers-present-in-government-school-yard-at-the-scheduled-time-mrq/articleshow-oenw7qy</link>
            <guid isPermaLink="true">https://kannada.asianetnews.com/karnataka-districts/ai-based-face-location-attendance-system-effect-teachers-present-in-government-school-yard-at-the-scheduled-time-mrq/articleshow-oenw7qy</guid>
            <pubDate>Wed, 17 Jun 2026 08:06:30 +0530</pubDate>
            <description><![CDATA[ಬಳ್ಳಾರಿಯಲ್ಲಿ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಎಐ ಆಧಾರಿತ ಫೇಸ್-ಲೊಕೇಶನ್ ಹಾಜರಾತಿ ವ್ಯವಸ್ಥೆಯಿಂದಾಗಿ, ಶಿಕ್ಷಕರು ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗುತ್ತಿದ್ದಾರೆ. ಈ ಹೊಸ ನಿಯಮವು ಶಿಕ್ಷಕರ ಸಮಯಪ್ರಜ್ಞೆಯನ್ನು ಹೆಚ್ಚಿಸಿದ್ದು, ತಡವಾಗಿ ಬರುವ ಪ್ರವೃತ್ತಿಗೆ ಕಡಿವಾಣ ಹಾಕಿದೆ. ಇದೇ ವ್ಯವಸ್ಥೆಯನ್ನು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೂ ಜಾರಿಗೊಳಿಸಲು ಇಲಾಖೆ ಮುಂದಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv9pw63bv5w7dj4qe8s3ekcx,imgname-teachers-1781663668331.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಜುನಾಥ ಕೆ.ಎಂ.&lt;/strong&gt;&lt;/p&gt;&lt;p&gt;&lt;strong&gt;ಬಳ್ಳಾರಿ: &lt;/strong&gt;ರಾಜ್ಯ ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಫೇಸ್ ಲೊಕೇಶನ್ ಹಾಜರಾತಿ ಆದೇಶ ಗಣಿಜಿಲ್ಲೆ ಬಳ್ಳಾರಿಯಲ್ಲಿ ಯಶಸ್ವಿಯಾಗಿದ್ದು, ಸಮಯವಾಗುತ್ತಿದ್ದಂತೆಯೇ ಶಿಕ್ಷಕರು ಶಾಲೆಯತ್ತ ತರಾತುರಿಯಲ್ಲಿ ಓಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.&lt;/p&gt;&lt;p&gt;ಜೂ.1ರಿಂದ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗೆ ಎಐ ಆಧರಿತ ಫೇಸ್ ಲೊಕೇಶನ್&zwnj; ಹಾಜರಾತಿ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಇಲಾಖೆಯ ಆದೇಶದನ್ವಯ ನಿಗದಿತ ಸಮಯ ಮೀರಿ ಶಾಲೆಗೆ ಬರುವ ಶಿಕ್ಷಕ ಸಿಬ್ಬಂದಿಗೆ ಆಕಸ್ಮಿಕ ರಜೆ ಎಂದು ಪರಿಗಣಿಸುತ್ತಿರುವುದರಿಂದ ಶಿಕ್ಷಕರು ತಡ ಮಾಡದೆ ಶಾಲೆಯತ್ತ ತರಾತುರಿಯ ಹೆಜ್ಜೆ ಹಾಕುತ್ತಿರುವುದು ಕಂಡು ಬರುತ್ತಿದೆ.&lt;/p&gt;&lt;p&gt;ನೂತನ ಹಾಜರಾತಿ ವ್ಯವಸ್ಥೆ ಅನುಷ್ಠಾನಗೊಳಿಸಿದ ಬಳಿಕ ಶೇ.95 ಸಿಬ್ಬಂದಿ ಶಾಲೆಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದಾರೆ. ಇನ್ನು ಕೆಲವೆಡೆ ತಾಂತ್ರಿಕ ಸಮಸ್ಯೆಗಳಿದ್ದು, ಕ್ರಮೇಣವಾಗಿ ಸರಿಪಡಿಸಲಾಗುತ್ತಿದೆ ಎಂದು ಇಲಾಖೆ ಮೂಲಗಳು ಖಚಿತಪಡಿಸಿವೆ.&lt;/p&gt;&lt;h2&gt;&lt;strong&gt;ಲೊಕೇಶನ್ ಹಾಜರಾತಿ ಕಡ್ಡಾಯ ಯಾಕಾಯ್ತು?&lt;/strong&gt;&lt;/h2&gt;&lt;p&gt;ಸರ್ಕಾರಿ ಶಾಲೆ ಶಿಕ್ಷಕರ ಪೈಕಿ ಶೇ.15ರಷ್ಟು ಜನರು ಸರಿಯಾದ ಸಮಯಕ್ಕೆ ಹಾಜರಾಗುತ್ತಿರಲಿಲ್ಲ. ಈ ಪೈಕಿ ಶೇ.5ರಷ್ಟು ಮಂದಿ ಶಾಲೆಯ ಮುಖ ನೋಡುವುದೇ ಅಪರೂಪ ಎನ್ನುವಂತಾಗಿತ್ತು. ಶಿಕ್ಷಕರ ಸಂಘಟನೆ ಕೆಲಸ ನೆಪದಲ್ಲಿ ಹೊರಗಡೆ ಇರುತ್ತಿದ್ದರು. ಇನ್ನು ಶಾಲೆಗೆ ಹಾಜರಾಗುವ ಶಿಕ್ಷಕರು ಸಹ ತಡವಾಗಿ ಶಾಲೆಗೆ ಬರುವುದನ್ನು ರೂಢಿ ಮಾಡಿಕೊಂಡಿದ್ದರು. ಇನ್ನು ಮುಖ್ಯ ಶಿಕ್ಷಕರನ್ನು ಯಾರೂ ಪ್ರಶ್ನಿಸುವಂತಿರಲಿಲ್ಲ. ಡಿಡಿಪಿಐ ಕಚೇರಿ ಕೆಲಸ, ಬಿಇಒ ಕಚೇರಿ ಕೆಲಸ ಎಂದು ಹೇಳಿಕೊಂಡು ಶಾಲೆಯಿಂದ ಹೊರಗಡೆಯೇ ಹೆಚ್ಚಾಗಿ ಕಾಲ ಕಳೆಯುತ್ತಾರೆ ಎಂಬ ಆರೋಪಗಳಿದ್ದವು. ಲೋಕೇಶನ್ ಹಾಜರಾತಿ ಕಡ್ಡಾಯಗೊಳಿಸಿದ ಬಳಿಕ ಮುಖ್ಯಶಿಕ್ಷಕರು ಸೇರಿದಂತೆ ಶಾಲಾ ಸಿಬ್ಬಂದಿ ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗಿ ವಿದ್ಯಾರ್ಥಿಗಳಿಗೆ ನಿತ್ಯ ದರ್ಶನ ನೀಡುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಕೆಲವರಿಗೆ ನುಂಗದ ತುತ್ತಾದ ಆದೇಶ&lt;/strong&gt;&lt;/h3&gt;&lt;p&gt;ರಾಜ್ಯ ಶಿಕ್ಷಣ ಇಲಾಖೆ ಜಾರಿಗೊಳಿಸಿದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಫೇಸ್ ಲೊಕೇಶನ್ ಹಾಜರಾತಿ ಆದೇಶದಿಂದ ಪೋಷಕರಿಗೆ ಸಂತಸವಾಗಿದ್ದರೆ ನಿರ್ದಿಷ್ಟ ಸಮಯಕ್ಕೆ ಶಾಲೆಗೆ ಬರದೆ, ರಾಜಕೀಯ ಮಾಡಿಕೊಂಡು ಓಡಾಡುವ, ಮುಖ್ಯ ಶಿಕ್ಷಕರ ಜೊತೆ ಹೊಂದಾಣಿಕೆ ಮಾಡಿಕೊಂಡು ತಡವಾಗಿ ಶಾಲೆಗೆ ತೆರಳುವ ಬೋಧಕರು ಹಾಗೂ ಕ್ಲರ್ಕ್ ಮತ್ತಿತರ ಸಿಬ್ಬಂದಿಗೆ ನುಂಗದ ತುತ್ತಾಗಿ ಪರಿಣಮಿಸಿದೆ. ನಿತ್ಯ ನಿಗದಿತ ಸಮಯದೊಳಗೆ ಶಾಲೆಗೆ ಆಗಮಿಸಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರಂತೂ ಸರ್ಕಾರದ ಆದೇಶದಿಂದ ಸಂತಸಗೊಂಡಿದ್ದಾರೆ. ಶಾಲೆಗೆ ಕೆಲಸಕ್ಕೆ ಕಚೇರಿಗೆ ಹೋಗುವ ಮುಖ್ಯ ಶಿಕ್ಷಕರು ಒಒಡಿ (ಅನ್ಯತಾ ಕಾರ್ಯ) ಎಂದು ಕಡ್ಡಾಯವಾಗಿ ನಮೂದಿಸುತ್ತಿದ್ದಾರೆ.&lt;/p&gt;&lt;p&gt;ಫೇಸ್&zwnj;, ಲೊಕೇಶನ್ ಆಧಾರಿತ ಹಾಜರಾತಿ ಕುರಿತಂತೆ ಕನ್ನಡಪ್ರಭಕ್ಕೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜೆ.ಎಂ. ತಿಪ್ಪೇಸ್ವಾಮಿ, ಸರ್ಕಾರದ ಆದೇಶ ಎಲ್ಲ ಕಡೆ ಜಾರಿಯಾಗಿದೆ. ಕೆಲವೆಡೆ ತಾಂತ್ರಿಕ ಕಾರಣದಿಂದ ಸಮಸ್ಯೆಯಾಗಿರಬಹುದು. ಅದನ್ನು ನಿವಾರಿಸುವ ಕೆಲಸವೂ ನಡೆದಿದೆ ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ಮಕ್ಕಳ ಫೇಸ್&zwnj; ಹಾಜರಾತಿ ಪ್ರಕ್ರಿಯೆಗೆ ಚಾಲನೆ&lt;/strong&gt;&lt;/h3&gt;&lt;p&gt;ಶಿಕ್ಷಕರ ಫೇಸ್&zwnj;-ಲೊಕೇಶನ್ ಹಾಜರಾತಿ ಅನುಷ್ಠಾನ ಬೆನ್ನಲ್ಲೇ ಮಕ್ಕಳ ಫೇಸ್ ಹಾಜರಾತಿ ಕಾರ್ಯಕ್ಕೂ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಶುರುಗೊಳಿಸಲಾಗಿದ್ದು ಜುಲೈ 1 ರಿಂದ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಫೇಸ್ ರಿಕಗ್ನಿಷನ್ ಹಾಜರಾತಿ ವ್ಯವಸ್ಥೆ ಅಧಿಕೃತವಾಗಿ ಜಾರಿಗೊಳ್ಳಲಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕನ್ನಡಪ್ರಭಕ್ಕೆ ಖಚಿತಪಡಿಸಿದ್ದಾರೆ. ಇದರಿಂದ ಮೊಟ್ಟೆ, ಹಾಲು, ಬಿಸಿಯೂಟ ಯೋಜನೆಗೆ ವಿದ್ಯಾರ್ಥಿಗಳ ಸಂಖ್ಯೆಯ ಕಳ್ಳಲೆಕ್ಕ ತೋರಿಸುತ್ತಿದ್ದ ಕೆಲವು ಮುಖ್ಯಶಿಕ್ಷಕರ &quot;ಕಾರ್ಯ&quot; ವೈಖರಿಗೆ ಕಡಿವಾಣ ಬೀಳಲಿದೆ.&amp;nbsp;&lt;/p&gt;&lt;p&gt;ಬಳ್ಳಾರಿ ಜಿಲ್ಲೆಯ 720 ಸರ್ಕಾರಿ ಶಾಲೆಗಳಲ್ಲಿ 3271 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ai-based-face-location-attendance-system-effect-teachers-present-in-government-school-yard-at-the-scheduled-time-mrq/articleshow-oenw7qy"/>
        </item>
        <item>
            <title><![CDATA[ಗ್ರಾಮವನ್ನು ದೇವಸ್ಥಾನಕ್ಕೆ ದಾನ ನೀಡಿದ ಮಾಹಿತಿ ವಿಜಯನಗರ ಕಾಲದ ಶಾಸನ ಕಂಪ್ಲಿಯಲ್ಲಿ ಪತ್ತೆ]]></title>
            <link>https://kannada.asianetnews.com/karnataka-districts/information-about-village-donations-to-hampi-temple-found-in-vijayanagara-era-inscription-in-kampli-ballari-mrq/articleshow-okyocdu</link>
            <guid isPermaLink="true">https://kannada.asianetnews.com/karnataka-districts/information-about-village-donations-to-hampi-temple-found-in-vijayanagara-era-inscription-in-kampli-ballari-mrq/articleshow-okyocdu</guid>
            <pubDate>Sun, 14 Jun 2026 07:38:56 +0530</pubDate>
            <description><![CDATA[&lt;p&gt;ವಿಜಯನಗರ ಸಾಮ್ರಾಜ್ಯದ 16ನೇ ಶತಮಾನದ ಅಪರೂಪದ ಶಾಸನವೊಂದು ಪತ್ತೆಯಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಮಣ್ಣಿನಲ್ಲಿ ಹೂತು ಹೋಗಿದ್ದ ಈ ಶಾಸನವನ್ನು ಸ್ಥಳೀಯ ಗ್ರಾಮಸ್ಥರು ಇತ್ತೀಚೆಗೆ ಗುರುತಿಸಿ ಸುರಕ್ಷಿತವಾಗಿ ಸಂರಕ್ಷಿಸಿರುವುದು ಇತಿಹಾಸಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv1xtbacy1h22yaasd3cxynk,imgname-kampli-1781402512716.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯದ ಅವಧಿಗೆ ಸೇರಿದ ಮಹತ್ವದ ಶಾಸನವೊಂದು ಪತ್ತೆಯಾಗಿದೆ. ಈ ಪ್ರದೇಶದ ಇತಿಹಾಸ, ಸಾಂಸ್ಕೃತಿಕ ಪರಂಪರೆಯ ಅಧ್ಯಯನಕ್ಕೆ ಹೊಸ ಬೆಳಕು ಚೆಲ್ಲಿದೆ.&lt;/p&gt;&lt;p&gt;ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಮಣ್ಣಿನಲ್ಲಿ ಹೂತು ಹೋಗಿದ್ದ ಈ ಶಾಸನವನ್ನು ಸ್ಥಳೀಯ ಗ್ರಾಮಸ್ಥರು ಇತ್ತೀಚೆಗೆ ಗುರುತಿಸಿ ಸುರಕ್ಷಿತವಾಗಿ ಸಂರಕ್ಷಿಸಿರುವುದು ಇತಿಹಾಸಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.&lt;/p&gt;&lt;h2&gt;&lt;strong&gt;ಶಾಸನದಲ್ಲಿರುವ ಮಾಹಿತಿ ಏನು?&lt;/strong&gt;&lt;/h2&gt;&lt;p&gt;ಸುಮಾರು ಎಂಟು ಅಡಿ ಉದ್ದ, ಎರಡೂವರೆ ಅಡಿ ಅಗಲದ ಕಲ್ಲಿನ ಮೇಲೆ ಕೆತ್ತಲಾಗಿರುವ ಈ ಶಾಸನವು ಆರು ಸಾಲುಗಳ ಬರಹವನ್ನು ಹೊಂದಿದೆ. ಪ್ರಾಚೀನ ಕನ್ನಡ ಲಿಪಿಯಲ್ಲಿ ಕೆತ್ತಲಾದ ಈ ಶಾಸನವು 16ನೇ ಶತಮಾನದ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದೆ. ಆ ಕಾಲದ ಆಡಳಿತ, ಧಾರ್ಮಿಕ ನಂಬಿಕೆ, ದಾನ ಧರ್ಮದ ವ್ಯವಸ್ಥೆಗಳ ಕುರಿತು ಮಹತ್ವದ ಮಾಹಿತಿ ಒಳಗೊಂಡಿದೆ.&lt;/p&gt;&lt;p&gt;ಶಾಸನದ ಮೇಲ್ಭಾಗದಲ್ಲಿ ತ್ರಿಶೂಲ, ಈಶ್ವರ, ನಂದಿ, ಸೂರ್ಯ, ಚಂದ್ರರ ಆಕೃತಿಗಳನ್ನು ಕೆತ್ತಲಾಗಿದೆ. ಇವು ವಿಜಯನಗರ ಕಾಲದ ಧಾರ್ಮಿಕ ಸಂಕೇತಗಳಾಗಿವೆ. ದೇವಾಲಯಗಳಿಗೆ ಸಂಬಂಧಿಸಿದ ದಾನ ಶಾಸನಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಅಂಶಗಳಾಗಿವೆ. ಶಾಸನದ ಕೆಳಭಾಗದಲ್ಲಿ ಗೋವಿನ ಚಿತ್ರವನ್ನು ಕೆತ್ತಲಾಗಿದ್ದು, ಕಾಲದ ಹೊಡೆತಕ್ಕೆ ಸಿಲುಕಿ ಆ ಚಿತ್ರ ಬಹುತೇಕ ಅಳಿಸಿಹೋಗಿದೆ.&lt;/p&gt;&lt;p&gt;ಇತಿಹಾಸ ಉಪನ್ಯಾಸಕ ಜೀರಿಗನೂರಿನ ಕೆ. ಆಂಜಿನೇಯ್ಯ ಮಾಹಿತಿ ನೀಡಿ, ಈ ಶಾಸನವು ಈಗಾಗಲೇ ಪುರಾತತ್ವ ಇಲಾಖೆಯ ದಾಖಲೆಗಳಲ್ಲಿ ಪ್ರಕಟಿತಗೊಂಡಿರುವುದಾಗಿ ತಿಳಿಸಿದ್ದಾರೆ. 1997ರಲ್ಲಿ ಮೈಸೂರಿನ ಪುರಾತತ್ವ ಮತ್ತು ವಸ್ತು ಸಂಗ್ರಹಾಲಯಗಳ ನಿರ್ದೇಶನಾಲಯ ಪ್ರಕಟಿಸಿದ ಇನ್&zwnj;ಸ್ಕ್ರಿಪ್ಷನ್ಸ್ ಆಫ್ ಬಳ್ಳಾರಿ ಡಿಸ್ಟ್ರಿಕ್ಟ್ ಕೃತಿಯಲ್ಲಿ ಈ ಶಾಸನದ ಪಠ್ಯ ದಾಖಲೆಯಾಗಿದೆ ಎಂದರು.&lt;/p&gt;&lt;h3&gt;&lt;strong&gt;ಎಚ್ಚರಿಕೆ ಸಂದೇಶವುಳ್ಳ ಶಾಸನ&lt;/strong&gt;&lt;/h3&gt;&lt;p&gt;ಶಾಸನದ ವಿಷಯದ ಪ್ರಕಾರ, ಅಂದಿನ ಗೊನಹಾಳ (ಈಗಿನ ಗೋನಾಳ) ಗ್ರಾಮವನ್ನು ಹಂಪಿಯ ವಿರೂಪಾಕ್ಷ ದೇವಾಲಯಕ್ಕೆ ದಾನವಾಗಿ ನೀಡಲಾಗಿತ್ತು. ದೇವಾಲಯಕ್ಕೆ ಸಲ್ಲಿಕೆಯಾಗಿದ್ದ ಗ್ರಾಮದ ಹಕ್ಕುಗಳು ಮತ್ತು ಆಸ್ತಿಯನ್ನು ಯಾರೂ ದುರುಪಯೋಗಪಡಿಸಿಕೊಳ್ಳಬಾರದು ಎಂಬ ಎಚ್ಚರಿಕೆಯ ಸಂದೇಶವನ್ನು ಈ ಶಾಸನದಲ್ಲಿ ದಾಖಲಿಸಲಾಗಿದೆ. ದೇವಾಲಯಗಳ ಆರ್ಥಿಕ ಮೂಲಗಳನ್ನು ರಕ್ಷಿಸುವ ಉದ್ದೇಶದಿಂದ ಇಂತಹ ಶಾಸನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗುತ್ತಿತ್ತು ಎಂದು ಇತಿಹಾಸ ತಜ್ಞರು ಅಭಿಪ್ರಾಯಪಡುತ್ತಾರೆ. ಇದೇ ಗ್ರಾಮದಲ್ಲಿ ಇನ್ನೊಂದು ಶಾಸನ ದೊರೆತಿರುವ ಬಗ್ಗೆ ದಾಖಲೆಗಳಲ್ಲಿ ಉಲ್ಲೇಖವಿದ್ದು, ಅದು ಪ್ರಸ್ತುತ ಮಣ್ಣಿನಡಿ ಹೂತುಹೋಗಿರುವ ಸಾಧ್ಯತೆ ಇದೆ. ಆ ಶಾಸನವನ್ನು ಪತ್ತೆಹಚ್ಚಿ ಸಂರಕ್ಷಿಸುವ ಅಗತ್ಯವಿದೆ ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿ ಮಣ್ಣಲ್ಲಿ ಅಡಗಿದ್ದ ಚಾಲುಕ್ಯರ ರಹಸ್ಯ ಪತ್ತೆ! 13 ಸಾಲುಗಳಲ್ಲಿ ಕನ್ನಡ ಶಾಸನ, ಜಗದೇಕಮಲ್ಲನ ಆಳ್ವಿಕೆ ಉಲ್ಲೇಖ&lt;/strong&gt;&lt;/p&gt;&lt;p&gt;ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ ಮಾತನಾಡಿ, ಗೊನಹಾಳ ಗ್ರಾಮವನ್ನು ಹಂಪಿಯ ವಿರೂಪಾಕ್ಷ ದೇವರಿಗೆ ದಾನವಾಗಿ ನೀಡಿರುವುದನ್ನು ದಾಖಲಿಸುವ ಉದ್ದೇಶದಿಂದ ಈ ಶಾಸನವನ್ನು ಸ್ಥಾಪಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇದು ಒಂದು ರೀತಿಯ ನಾಮಫಲಕ ಅಥವಾ ಗಡಿ ಗುರುತು ಶಾಸನವಾಗಿದ್ದು, ದೇವಾಲಯದ ಆಸ್ತಿಯ ರಕ್ಷಣೆಗೆ ಸಂಬಂಧಿಸಿದ ಮಹತ್ವದ ದಾಖಲೆ ಎಂದು ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕನ್ನಡಿಗರೇ, ಕನ್ನಡದ ಮೊದಲ ಹಲ್ಮಿಡಿ ಶಾಸನ ನೋಡಬೇಕೆ? ಕೇವಲ 5 ದಿನ ಅವಕಾಶವಿದೆ, ತಪ್ಪದೇ ಇಲ್ಲಿಗೆ ಭೇಟಿ ನೀಡಿ!&lt;/strong&gt;&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/information-about-village-donations-to-hampi-temple-found-in-vijayanagara-era-inscription-in-kampli-ballari-mrq/articleshow-okyocdu"/>
        </item>
        <item>
            <title><![CDATA[ಬಳ್ಳಾರಿಯಲ್ಲಿ ಸಿಕ್ಕ ಬಂಡೆಯಲ್ಲಿ ಬಯಲಾಯ್ತು 17ನೇ ಶತಮಾನದ ನಿಗೂಢ ರಹಸ್ಯ, 8 ಸಾಲಿನ ಅಪರೂಪದ ಶಾಸನ ಪತ್ತೆ!]]></title>
            <link>https://kannada.asianetnews.com/karnataka-districts/karnataka-news-17th-century-palegar-era-inscription-found-in-somasamudra-ballari-gdp/articleshow-qtgwwr1</link>
            <guid isPermaLink="true">https://kannada.asianetnews.com/karnataka-districts/karnataka-news-17th-century-palegar-era-inscription-found-in-somasamudra-ballari-gdp/articleshow-qtgwwr1</guid>
            <pubDate>Fri, 12 Jun 2026 13:01:54 +0530</pubDate>
            <description><![CDATA[ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಕೃಷಿ ಜಮೀನೊಂದರಲ್ಲಿ 17ನೇ ಶತಮಾನಕ್ಕೆ ಸೇರಿದ ಅಪರೂಪದ ಶಿಲಾಶಾಸನವೊಂದು ಪತ್ತೆಯಾಗಿದೆ. ಪಾಳೆಗಾರರ ಕಾಲದ್ದೆಂದು ಅಂದಾಜಿಸಲಾದ ಈ ಶಾಸನವು, ಸ್ಥಳೀಯ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುವ ಮಹತ್ವದ ದಾಖಲೆಯಾಗಿದ್ದು, ಸಂಶೋಧಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktxbrt1jah4ad1e014kr31hj,imgname-inscription-found-in-somasamudra-1781249370162.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಳ್ಳಾರಿ:&lt;/strong&gt; ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ 17ನೇ ಶತಮಾನಕ್ಕೆ ಸೇರಿದ ಅತ್ಯಂತ ಅಪರೂಪದ ಶಿಲಾಶಾಸನವೊಂದು ಪತ್ತೆಯಾಗಿದ್ದು, ಇತಿಹಾಸ ಪ್ರೇಮಿಗಳು ಹಾಗೂ ಸಂಶೋಧಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸ್ಥಳೀಯ ಇತಿಹಾಸವನ್ನು ಪುನರ್ ನಿರ್ಮಿಸುವ ದೃಷ್ಟಿಯಿಂದ ಈ ಶಾಸನವು ಅತ್ಯಂತ ಮಹತ್ವದ ಮತ್ತು ಮೌಲ್ಯಯುತ ದಾಖಲೆಯಾಗಿದೆ ಎಂದು ಇತಿಹಾಸ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;h2&gt;ಜಮೀನಿನ ಹಾಸು ಬಂಡೆಯ ಮೇಲೆ ಪತ್ತೆಯಾದ ಶಾಸನ&lt;/h2&gt;&lt;p&gt;ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಿಂದ ಸುಮಾರು 1.5 ಕಿ.ಮೀ ದೂರದಲ್ಲಿರುವ ವೀರಾಂಜನೇಯ ಕ್ಯಾಂಪ್&zwnj;ಗೆ ಹೊಂದಿಕೊಂಡಿರುವ ಸಿದ್ದನಗೌಡ ಎಂಬುವವರಿಗೆ ಸೇರಿದ ಕೃಷಿ ಜಮೀನಿನಲ್ಲಿ ಬುಧವಾರ ಈ ಶಾಸನ ಪತ್ತೆಯಾಗಿದೆ. ಜಮೀನಿನಲ್ಲಿದ್ದ ದೊಡ್ಡದೊಂದು ಹಾಸು ಬಂಡೆಯ ಮೇಲೆ ಈ ಐತಿಹಾಸಿಕ ದಾಖಲೆಯನ್ನು ಕೆತ್ತಲಾಗಿದೆ. ಬಂಡೆಯ ಮೇಲೆ ಸುಂದರವಾದ ನಂದಿ ಮೂರ್ತಿಯ ಶಿಲ್ಪವನ್ನು ಕೆತ್ತಲಾಗಿದ್ದು, ಆ ಶಿಲ್ಪದ ಸುತ್ತಲೂ ಹಾಗೂ ಕೆಳಭಾಗದಲ್ಲಿ 8 ಸಾಲುಗಳಿರುವ ಸುದೀರ್ಘ ಶಾಸನವನ್ನು ಬರೆಯಲಾಗಿದೆ.&lt;/p&gt;&lt;h2&gt;ಪಾಳೆಗಾರರ ಕಾಲದ ಇತಿಹಾಸಕ್ಕೆ ಸಾಕ್ಷಿ&lt;/h2&gt;&lt;p&gt;ಈ ಶಾಸನದ ಲಿಪಿಯ ವಿಕಾಸ ಮತ್ತು ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಇದು 17ನೇ ಶತಮಾನಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಜ್ಞರು ಪ್ರಾಥಮಿಕ ಅಂದಾಜು ಮಾಡಿದ್ದಾರೆ. ಆ ಕಾಲಘಟ್ಟದಲ್ಲಿ ಬಳ್ಳಾರಿ ಮತ್ತು ಕುರುಗೋಡು ಸುತ್ತಮುತ್ತಲಿನ ಭಾಗಗಳಲ್ಲಿ ಆಳ್ವಿಕೆ ನಡೆಸುತ್ತಿದ್ದ ಸ್ಥಳೀಯ ಪಾಳೆಗಾರರ ರಾಜವಂಶ ಅಥವಾ ಅವರ ಆಡಳಿತಾವಧಿಗೆ ಈ ಶಾಸನವು ಸಂಬಂಧಿಸಿರಬಹುದು ಎಂದು ಹೇಳಲಾಗಿದೆ.&lt;/p&gt;&lt;p&gt;ಈ ಕುರಿತು ಮೈಸೂರು ಪ್ರಾಚ್ಯವಸ್ತು ಇಲಾಖೆಯ ಸಹಾಯಕ ಅಧೀಕ್ಷಕರು ಹಾಗೂ ಶಾಸನ ತಜ್ಞರಾದ ಅನಿಲಕುಮಾರ್ ಅವರು ಮಾತನಾಡಿ, ಸದ್ಯ ಮಣ್ಣಿನಲ್ಲಿ ಹೂತುಹೋಗಿರುವ ಇಂತಹ ಹಳೆಯ ಶಾಸನಗಳನ್ನು ಸಂಪೂರ್ಣವಾಗಿ ಹೊರತೆಗೆದು, ಸ್ವಚ್ಛಗೊಳಿಸಿ ಆಳವಾದ ಅಧ್ಯಯನಕ್ಕೆ ಒಳಪಡಿಸಿದರೆ, ಈ ಭಾಗದ ಸ್ಥಳೀಯ ಇತಿಹಾಸ, ಸಂಸ್ಕೃತಿ ಮತ್ತು ಅಂದಿನ ಆಡಳಿತ ವ್ಯವಸ್ಥೆಯ ಕುರಿತು ಮತ್ತಷ್ಟು ರೋಚಕ ಹಾಗೂ ಮಹತ್ವದ ಮಾಹಿತಿಗಳು ಬೆಳಕಿಗೆ ಬರಲಿವೆ ಎಂದು ತಿಳಿಸಿದ್ದಾರೆ.&lt;/p&gt;&lt;h2&gt;ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಸ್ಥಳೀಯರ ಒತ್ತಾಯ&lt;/h2&gt;&lt;p&gt;ತಮ್ಮ ಗ್ರಾಮದ ಜಮೀನಿನಲ್ಲಿ ಪತ್ತೆಯಾಗಿರುವ ಈ ಅಪರೂಪದ ಐತಿಹಾಸಿಕ ಸಂಕೇತವನ್ನು ಸಂರಕ್ಷಿಸಬೇಕು ಎಂಬ ಧ್ವನಿ ಈಗ ಸ್ಥಳೀಯವಾಗಿ ಬಲವಾಗಿ ಕೇಳಿಬರುತ್ತಿದೆ. ಈ ಶಾಸನವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ, ಅಡಗಿರುವ ಇತಿಹಾಸದ ಸತ್ಯಗಳನ್ನು ಸಾರ್ವಜನಿಕರ ಮುಂದೆ ತರಲು ಜಿಲ್ಲಾಡಳಿತ, ಪುರಾತತ್ವ ಇಲಾಖೆ ಹಾಗೂ ಸ್ಥಳೀಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಗ್ರಾಮದ ಪ್ರಮುಖರಾದ ಎರಿಸ್ವಾಮಿ, ಶ್ರೀನಿವಾಸ, ಸೋಮಶೇಖರ್, ಸಿದ್ದನಗೌಡ, ಗಾದಿಲಿಂಗನಗೌಡ ಮತ್ತು ಗಣೇಶ್ ಜಂಟಿಯಾಗಿ ಒತ್ತಾಯಿಸಿದ್ದಾರೆ. ಇತಿಹಾಸದ ಕೊಂಡಿಯಾಗಿರುವ ಈ ಶಾಸನವು ಮುಂದಿನ ದಿನಗಳಲ್ಲಿ ಕುರುಗೋಡು ತಾಲೂಕಿನ ಸಾಂಸ್ಕೃತಿಕ ಹಿನ್ನೆಲೆಗೆ ಹೊಸ ಆಯಾಮ ನೀಡುವ ಸಾಧ್ಯತೆ ದಟ್ಟವಾಗಿದೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-news-17th-century-palegar-era-inscription-found-in-somasamudra-ballari-gdp/articleshow-qtgwwr1"/>
        </item>
        <item>
            <title><![CDATA[ಜಮೀನಿಗೆ ತೆರಳಲು ಸ್ವಂತ ಹಣದಲ್ಲಿ 3.5 ಕಿ.ಮೀ. ಉದ್ದದ ರಸ್ತೆ ನಿರ್ಮಿಸಿಕೊಂಡ ರೈತರು]]></title>
            <link>https://kannada.asianetnews.com/karnataka-districts/ballari-farmers-built-a-3-pointc5-km-long-road-with-their-own-money-to-reach-their-farms-mrq/articleshow-rr9puf3</link>
            <guid isPermaLink="true">https://kannada.asianetnews.com/karnataka-districts/ballari-farmers-built-a-3-pointc5-km-long-road-with-their-own-money-to-reach-their-farms-mrq/articleshow-rr9puf3</guid>
            <pubDate>Mon, 22 Jun 2026 06:20:00 +0530</pubDate>
            <description><![CDATA[ಕುರುಗೋಡಿನ ಮುಷ್ಟಗಟ್ಟೆ ಕಾಲುವೆ ವ್ಯಾಪ್ತಿಯ ರೈತರು, ತಮ್ಮ ಜಮೀನುಗಳಿಗೆ ಹೋಗುವ ಸರ್ವಿಸ್ ರಸ್ತೆ ಹಾಳಾಗಿದ್ದರಿಂದ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸ್ವಯಂ ಪ್ರೇರಿತರಾಗಿದ್ದಾರೆ. ಸುಮಾರು 150 ರೈತರು ಒಟ್ಟಾಗಿ ₹3 ಲಕ್ಷ ಸಂಗ್ರಹಿಸಿ, 3.5 ಕಿ.ಮೀ. ಉದ್ದದ ರಸ್ತೆಯನ್ನು ಸ್ವಂತ ಖರ್ಚಿನಲ್ಲಿ ದುರಸ್ತಿ ಮಾಡಿಕೊಂಡು ಮಾದರಿಯಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvpcpv94x1mgmgmzch42dd4r,imgname-ballari-farmers--1782089215268.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುರುಗೋಡು: &lt;/strong&gt;ಇಲ್ಲಿನ ಬಳ್ಳಾರಿ ರಸ್ತೆಯಲ್ಲಿ ಬರುವ ಮುಷ್ಟಗಟ್ಟೆ ಕಾಲುವೆ ವ್ಯಾಪ್ತಿಯ ರೈತರು ತಮ್ಮ ಜಮೀನುಗಳಿಗೆ ಹೋಗುವ ಸರ್ವಿಸ್ ರಸ್ತೆಯನ್ನು ಸ್ವಂತ ಹಣದಲ್ಲಿ ದುರಸ್ತಿ ಮಾಡಿ ಇಲಾಖೆಯ ಗಮನ ಸೆಳೆದಿದ್ದಾರೆ.&lt;/p&gt;&lt;p&gt;ಈ ಕಾಲುವೆ ಇರುವ ಮೂರೂವರೆ ಕಿ.ಮೀ. ರಸ್ತೆ ದಾಟಿ ಹೋದರೆ 500 ಎಕರೆ ಕೃಷಿ ಭೂಮಿ ನೀರಾವರಿ ವ್ಯಾಪ್ತಿಗೆ ಒಳಪಟ್ಟಿದೆ. ಕಾಲುವೆಗೆ ಹೊಂದಿಕೊಂಡು ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಮೊಣಕಾಲೆತ್ತರದ ಗುಂಡಿಗಳು ನಿರ್ಮಾಣವಾಗಿವೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ಸಂಗ್ರಹವಾಗಿ ರಸ್ತೆ ಕಾಣದಂತಾಗುತ್ತಿತ್ತು. ಗ್ರಾಮದ ರೈತರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಜಮೀನುಗಳಿಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿತ್ತು. ಕೃಷಿ ಚಟುವಟಿಕೆಗಾಗಿ ನಿತ್ಯ ಓಡಾಡುವ ರೈತರು ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಘಟನೆಗಳು ಜರುಗಿವೆ.&lt;/p&gt;&lt;h2&gt;&lt;strong&gt;150 ರೈತರಿಂದ 3 ಲಕ್ಷ ಹಣ ಸಂಗ್ರಹ&lt;/strong&gt;&lt;/h2&gt;&lt;p&gt;ಈ ಬಗ್ಗೆ ಜನಪ್ರತಿನಿಧಿಗಳು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತರು ಸ್ವಯಂ ಪ್ರೇರಣೆಯಿಂದ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. 150 ರೈತರು ಎಕರೆಗೆ ₹2000ದಂತೆ ಹಣ ಹಾಕಿ ಒಟ್ಟು ₹3 ಲಕ್ಷ ಸಂಗ್ರಹಿಸಿದ್ದಾರೆ. ಟ್ರ್ಯಾಕ್ಟರ್, ಜೆಸಿಬಿ ಯಂತ್ರಗಳ ನೆರವಿನಿಂದ ಗ್ರಾವೆಲ್ ಬಳಸಿ ೩.೫ ಕಿ.ಮೀ ರಸ್ತೆ ದುರಸ್ತಿ ಮಾಡಿ ಮಾದರಿಯಾಗಿದ್ದಾರೆ.&lt;/p&gt;&lt;p&gt;ಕಳೆದ ಮೂರು ವರ್ಷಗಳ ಹಿಂದೆ ನಾವೇ ಹಣ ಸಂಗ್ರಹಿಸಿ ರಸ್ತೆ ದುರಸ್ತಿ ಮಾಡಿಕೊಂಡಿದ್ದೆವು. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ರಸ್ತೆ ಸಂಪೂರ್ಣ ಹಾಳಾಗಿ ಗುಂಡಿ ನಿರ್ಮಾಣವಾಗಿದ್ದವು. ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸದ ಕಾರಣ ನಾವೇ ದುರಸ್ತಿಗೆ ಮುಂದಾಬೇಕಾಯಿತು ಎನ್ನುತ್ತಾರೆ ಇಲ್ಲಿನ ರೈತರು.&lt;/p&gt;&lt;p&gt;ಈ ವೇಳೆ ರೈತರಾದ ತಂಗಿ ಸುರೇಶಪ್ಪ, ಬಸವರಾಜ, ಕರೆಪ್ಪ, ನಾಗರಾಜ, ಮೂರುಣ್ಣೆ ಬಸವರಾಜ, ಪೂಜಾರಿ ಸಿದ್ದಬಸಪ್ಪ, ಪೂಜಾರಿ ಗಂಗಾಧರ, ಶೀಲಪ್ಪನವರ ವೀರೇಶ, ಟಿ.ಮಲ್ಲಿಕಾರ್ಜುನ, ಗೊಲ್ಲರ ನಾಗರಾಜ ಮತ್ತಿತರರಿದ್ದರು.&lt;/p&gt;&lt;h3&gt;&lt;strong&gt;ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ&lt;/strong&gt;&lt;/h3&gt;&lt;p&gt;ರೈತರು ಎದುರಿಸುತ್ತಿರುವ ಸಮಸ್ಯೆ ಕುರಿತು ಜನಪ್ರತಿನಿಧಿಗಳು, ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ತಕ್ಷಣವೇ ಇತ್ತ ಕಡೆ ಗಮನಹರಿಸಿರಲಿಲ್ಲ. ರೈತರು ಸ್ವಂತ ಹಣದಲ್ಲಿ ರಸ್ತೆ ದುರಸ್ತಿ ಮಾಡಿಸಿದ್ದೇವೆ ಎನ್ನುತ್ತಾರೆ ರೈತ ಕರೆಪ್ಪನವರ ಲೋಕೇಶ.&lt;/p&gt;&lt;p&gt;ರೈತರ ಜಮೀನುಗಳಿಗೆ ತೆರಳುವ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ರಸ್ತೆ ದುರಸ್ತಿ ಮಾಡಿಸಲಾಗುವುದು ಎನ್ನುತ್ತಾರೆ ಸಣ್ಣ ನೀರಾವರಿ ಇಲಾಖೆಯ ಎಇಇ ಜಿ.ರಾಮರೆಡ್ಡಿ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ballari-farmers-built-a-3-pointc5-km-long-road-with-their-own-money-to-reach-their-farms-mrq/articleshow-rr9puf3"/>
        </item>
        <item>
            <title><![CDATA[ಬಳ್ಳಾರಿ–ರಾಯದುರ್ಗ–ತುಮಕೂರು ನಡುವಿನ ರೈಲ್ವೆ ಮಾರ್ಗ ಆರಂಭ ಯಾವಾಗ? ಜಿ.ಪರಮೇಶ್ವರ ಮಾಹಿತಿ]]></title>
            <link>https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq</link>
            <guid isPermaLink="true">https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq</guid>
            <pubDate>Tue, 09 Jun 2026 08:45:15 +0530</pubDate>
            <description><![CDATA[ಬಳ್ಳಾರಿ-ರಾಯದುರ್ಗ-ತುಮಕೂರು ರೈಲ್ವೆ ಮಾರ್ಗವನ್ನು 2027ರೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ.ಪರಮೇಶ್ವರ ತಿಳಿಸಿದ್ದಾರೆ. ಭೂಸ್ವಾಧೀನ ವಿಳಂಬದಿಂದ ಕುಂಠಿತಗೊಂಡಿದ್ದ ಈ ಯೋಜನೆಯ ಜೊತೆಗೆ, ಎಸ್ಕಾಂಗಳ ಖಾಸಗೀಕರಣ ವಿರೋಧಿಸಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktn5wq7bwmrxn0bv1zdgx826,imgname-ballari-tumakuru-1780974771435.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತುಮಕೂರು:&lt;/strong&gt; ತುಂಗಭದ್ರಾ ಕುಡಿಯುವ ನೀರಿನ ಯೋಜನೆಗೆ 2700 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲಾಗುವುದು. ಪಾವಗಡ ಬಸ್ ನಿಲ್ದಾಣ ನಿರ್ಮಾಣ ಹಾಗೂ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. 2027ರ ಒಳಗೆ ಬಳ್ಳಾರಿ&ndash;ರಾಯದುರ್ಗ&ndash;ತುಮಕೂರು ರೈಲ್ವೆ ಮಾರ್ಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಭೂಸ್ವಾಧೀನ ವಿಳಂಬದಿಂದ ಯೋಜನೆ ಕುಂಠಿತ&lt;/strong&gt;&lt;/h2&gt;&lt;p&gt;&amp;nbsp;2007ರಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವಧಿಯಲ್ಲಿ ಈ ಯೋಜನೆಗೆ ಅನುಮೋದನೆ ದೊರೆತಿದ್ದು, ಅಂದಿನ ಶಾಸಕರು ಹಾಗೂ ಮುಖಂಡರ ಮನವಿಯಿಂದ ಪಿಂಕ್ ಬುಕ್&zwnj;ನಲ್ಲಿ ದಾಖಲೆಯಾಗಿತ್ತು ಎಂದು ಅವರು ಸ್ಮರಿಸಿದರು. ಆರಂಭದಲ್ಲಿ 98 ಕೋಟಿ ರೂ. ಮೀಸಲಿದ್ದರೂ ಭೂಸ್ವಾಧೀನ ವಿಳಂಬದಿಂದ ಯೋಜನೆ ಕುಂಠಿತಗೊಂಡಿತ್ತು ಈಗಾಗಲೇ ಬಳ್ಳಾರಿಯಿಂದ ಪಾವಗಡದವರೆಗೆ ಟ್ರ್ಯಾಕ್ ಅಳವಡಿಕೆ ಪೂರ್ಣಗೊಂಡಿದೆ ಎಂದರು.&lt;/p&gt;&lt;p&gt;ತುಮಕೂರಿನವರೆಗೆ ಕಾಮಗಾರಿ ಬಾಕಿಯಿದೆ. ಮಧುಗಿರಿ ಮತ್ತು ಕೊರಟಗೆರೆ ಭಾಗಗಳಲ್ಲಿ ಭೂಸ್ವಾಧೀನ ಪೂರ್ಣಗೊಂಡಿದ್ದು,ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ರೈಲು ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಸ್ಕಾಂ ನೌಕರರು ಎಸ್ಕಾಂಗಳ ಖಾಸಗೀಕರಣ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಡಿಸಿಎಂಗೆ ಮನವಿ ಸಲ್ಲಿಸಿದರು.&lt;/p&gt;&lt;h3&gt;&lt;strong&gt;ಖಾಸಗೀಕರಣ&lt;/strong&gt;&lt;/h3&gt;&lt;p&gt;ಈ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, &amp;nbsp;ಖಾಸಗೀಕರಣದಿಂದ ವಿದ್ಯುತ್ ದರ ಏರಿಕೆ, ಉದ್ಯೋಗ ಭದ್ರತೆ ಕುಗ್ಗುವಿಕೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೇವಾ ಗುಣಮಟ್ಟ ಕುಸಿಯುವ ಭೀತಿ ಇದೆಯಿದೆ. ವಿದ್ಯುತ್ ಕ್ಷೇತ್ರವು ಸಾರ್ವಜನಿಕ ಸೇವೆಯ ಪ್ರಮುಖ ಅಂಗವಾಗಿದ್ದು, ಲಾಭಕೇಂದ್ರಿತ ಖಾಸಗಿ ಸಂಸ್ಥೆಗಳ ಹಸ್ತಕ್ಷೇಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಬಹುದು. ಪ್ರಕೃತಿ ವಿಕೋಪಗಳಲ್ಲಿಯೂ ನಿರಂತರ ಸೇವೆ ನೀಡುತ್ತಿರುವ ನೌಕರರ ಪಾತ್ರವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.&lt;/p&gt;&lt;p&gt;ಮಾಜಿ ಸಚಿವ ವೆಂಕಟರಮಣಪ್ಪ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಭಾವುಕತೆಯ ಕ್ಷಣಗಳಿಗೆ ಸಾಕ್ಷಿಯಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿ ಆತ್ಮೀಯ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟರು.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/when-will-the-railway-line-between-ballari-rayadurga-tumakuru-start-information-from-dcm-g-parameshwara-mrq/articleshow-s7452eq"/>
        </item>
        <item>
            <title><![CDATA[ಊರಿಗೆ ಶುದ್ಧ ನೀರು ಕೊಟ್ಟ ಕೆರೆಗೆ ಸಿಕ್ಕಿದ್ದು ತ್ಯಾಜ್ಯ! ತಿಪ್ಪೆಗುಂಡಿಯಾದ ಸಿರಿಗೆರೆ ಪುರಾತನ ಕೆರೆ!]]></title>
            <link>https://kannada.asianetnews.com/karnataka-districts/ancient-lake-in-sirigeri-become-polluted-due-to-neglect-ballari-district-rav/articleshow-tnmt15y</link>
            <guid isPermaLink="true">https://kannada.asianetnews.com/karnataka-districts/ancient-lake-in-sirigeri-become-polluted-due-to-neglect-ballari-district-rav/articleshow-tnmt15y</guid>
            <pubDate>Thu, 18 Jun 2026 13:17:47 +0530</pubDate>
            <description><![CDATA[&lt;p&gt;ಕುರುಗೋಡು ತಾಲೂಕಿನ ಸಿರಿಗೇರಿ ಗ್ರಾಮದ ಪುರಾತನ ಕೆರೆಯು ತ್ಯಾಜ್ಯ ಮತ್ತು ಗಿಡಗಂಟಿಗಳಿಂದ ತುಂಬಿ, ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ಈ ಹಿಂದೆ ಇಬ್ಬರು ಮಕ್ಕಳು ಮೃತಪಟ್ಟಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯಕ್ಕೆಗ್ರಾಮಸ್ಥರು ಕಿಡಿಕಾರಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvctg0qsbybq74szq07tdpm5,imgname----------------------1--1781768127224.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎನ್.ಪಂಪನಗೌಡ ಬಾದನಹಟ್ಟಿ&lt;/strong&gt;&lt;/p&gt;&lt;p&gt;&lt;strong&gt;ಕುರುಗೋಡು&lt;/strong&gt;: ತಾಲೂಕಿನ ಪುರಾತನ ಕಾಲದ ಐತಿಹಾಸಿಕ ಮಹತ್ವದ ಕೆರೆ ತಿಪ್ಪೇಗುಂಡಿಯಂತಾಗಿದೆ. ಸಮೀಪದ ಸಿರಿಗೇರಿ ಗ್ರಾಮ(sirigeri)ದ ಹೃದಯ ಭಾಗದಲ್ಲಿರುವ ಪುರಾತನ ಕಾಲದ ಕೆರೆ(Ancient Lake)ಯು ತ್ಯಾಜ್ಯ ಹಾಗೂ ಗಿಡ-ಗಂಟಿ ಬೆಳೆದು ಬಿಡಾಡಿ ದನ, ಹಂದಿ, ನಾಯಿಗಳ ಆಶ್ರಯ ತಾಣವಾಗಿದೆ.&lt;/p&gt;&lt;p&gt;ಗ್ರಾಮದ ನಿವಾಸಿಗಳು ಕೆರೆಗೆ ತ್ಯಾಜ್ಯ ತಂದು ಸುರಿಯುತ್ತಿರುವುದರಿಂದ ದಾರಿಹೋಕರು, ಸುತ್ತಲಿನ ನಿವಾಸಿಗಳು, ಕೂಗಳತೆ ದೂರದ ಅಂಗನವಾಡಿ ಕೇಂದ್ರದ ಮಕ್ಕಳು ನಿತ್ಯ ದುರ್ವಾಸನೆಯಿಂದ ನರಕಯಾತನೆ ಅನುಭವಿಸುವಂತಾಗಿದೆ. ಸಾಲದಿದ್ದಕ್ಕೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಸರಿಸೃಪಗಳ ಉಪಟಳದಿಂದ ಶಾಲಾ-ಕಾಲೇಜಿಗೆ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಸ್ವಚ್ಛತೆ ಮರೀಚಿಕೆಯಾಗಿರುವ ಈ ಪ್ರದೇಶದಲ್ಲಿ ಮೂರು ವರ್ಷದ ಹಿಂದೆ ಮಳೆ ನೀರು ಸಂಗ್ರಹವಾಗಿದ್ದ ಗುಂಡಿಯಲ್ಲಿ ಇಬ್ಬರು ಮಕ್ಕಳು ಬಿದ್ದು ಅಸುನೀಗಿದ ಅವಘಡವೂ ನಡೆದಿತ್ತು. ಗುಂಡಿ ಮುಚ್ಚುವಂತೆ ಗ್ರಾಪಂಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.&lt;/p&gt;&lt;p&gt;ಪುರಾತನ ಕಾಲದ ಕೆರೆ ಅಭಿವೃದ್ಧಿ ಮಾಡುವುದು ಸೇರಿದಂತೆ ಗ್ರಾಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎನ್ನುತ್ತಾರೆ ವಕೀಲ ರಾಮ್&zwnj;ಬಾಬು.&lt;/p&gt;&lt;p&gt;ಕೆರೆಯಲ್ಲಿ ಕಸ-ಕಡ್ಡಿ, ತ್ಯಾಜ್ಯ ಎಸೆಯುವುದರಿಂದ ದುರ್ವಾಸನೆ ಬೀರುತ್ತಿದೆ. ಕೆರೆ ಸ್ವಚ್ಛಗೊಳಿಸಿ, ತಂತಿ ಕಂಬವನ್ನು ಅಳವಡಿಸಬೇಕು. ಶಾಸಕರು ಕೂಡಲೇ ಅನುದಾನ ಒದಗಿಸಿ ಅಭಿವೃದ್ಧಿಗೆ ಮುಂದಾಗಬೇಕು ಎನ್ನುತ್ತಾರೆ ಸಿರಿಗೇರಿ ಗ್ರಾಪಂ ಮಾಜಿ ಸದಸ್ಯ ಗೋಡೆ ಚೆನ್ನಪ್ಪ.&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/ancient-lake-in-sirigeri-become-polluted-due-to-neglect-ballari-district-rav/articleshow-tnmt15y"/>
        </item>
        <item>
            <title><![CDATA[Gruhalakshmi scheme: ಬಳ್ಳಾರಿಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ 4,225 ಅನರ್ಹರು ಪತ್ತೆ! ನಿಮ್ಮ ಹೆಸರು ಪಟ್ಟಿಯಲ್ಲಿದೆಯೇ?]]></title>
            <link>https://kannada.asianetnews.com/karnataka-districts/4-225-ineligible-people-in-grihalakshmi-scheme-in-bellari-rav/articleshow-xpas2un</link>
            <guid isPermaLink="true">https://kannada.asianetnews.com/karnataka-districts/4-225-ineligible-people-in-grihalakshmi-scheme-in-bellari-rav/articleshow-xpas2un</guid>
            <pubDate>Thu, 11 Jun 2026 11:41:41 +0530</pubDate>
            <description><![CDATA[ಬಳ್ಳಾರಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 4,225 ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಆದಾಯ ತೆರಿಗೆ ಪಾವತಿದಾರರು ಮತ್ತು ಮೃತಪಟ್ಟವರ ಹೆಸರಿನಲ್ಲಿ ಹಣ ಬಿಡುಗಡೆಯಾಗುತ್ತಿರುವುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರಿಶೀಲನೆ ವೇಳೆ ಪತ್ತೆಹಚ್ಚಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksmy83hhvn93ye2ghwb54zs7,imgname-gruhalakshmi-1779893014065.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಶೇಷ ವರದಿ&lt;/strong&gt;&lt;/p&gt;&lt;p&gt;ಬಳ್ಳಾರಿ (ಜೂ.11): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 4,225 ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಪರಿಶೀಲನೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ 4 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅನರ್ಹರು ಇರುವುದು ಪತ್ತೆಯಾಗಿದ್ದು, ಈ ಎಲ್ಲರನ್ನೂ ಯೋಜನೆಯ ಪಟ್ಟಿಯಿಂದ ಕೈಬಿಡಲಾಗಿದೆ.&lt;/p&gt;&lt;h2&gt;ಮೃತರ ಖಾತೆಗೂ ಗೃಹಲಕ್ಷ್ಮಿ ಹಣ&lt;/h2&gt;&lt;p&gt;ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಫಲಾನುಭವಿಗಳ ಪೈಕಿ ದೊಡ್ಡ ಸಂಖ್ಯೆಯಲ್ಲಿ ಶ್ರೀಮಂತರು ಇದ್ದು ಅವರ ಖಾತೆಗೆ ನಿರಂತರ ಪ್ರತಿ ತಿಂಗಳು ₹2 ಸಾವಿರ ಪಾವತಿಯಾಗುತ್ತಿದೆ. ಏತನ್ಮಧ್ಯೆ ಮೃತಪಟ್ಟವರ ಖಾತೆಗೂ ಹಣ ಸಂದಾಯವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಂಗನವಾಗಿ ಕಾರ್ಯಕರ್ತೆಯರಿಂದ ಮನೆಮನೆ ಪರಿಶೀಲನೆ ನಡೆಸಿದ ಬಳಿಕ ಗಣಿ ಜಿಲ್ಲೆ ಬಳ್ಳಾರಿಯಲ್ಲಿ 4,225 ಜನರು ಅನರ್ಹರು ಎಂದು ಬೆಳಕಿಗೆ ಬಂದಿದೆ.&lt;/p&gt;&lt;h3&gt;ತೆರಿಗೆ ಪಾವತಿದಾರರಿಗೂ ಗೃಹಲಕ್ಷ್ಮಿ ಹಣ&lt;/h3&gt;&lt;p&gt;ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನಡೆಸಿದ ದಾಖಲೆಗಳ ಪರಿಶೀಲನೆಯಲ್ಲಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದವರ ಪೈಕಿ 3,921 ಮಂದಿ ಆದಾಯ ತೆರಿಗೆ ಪಾವತಿದಾರರು ಎಂಬುದು ಪತ್ತೆಯಾಗಿದೆ. ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಪಾವತಿದಾರರು ಯೋಜನೆಗೆ ಅರ್ಹರಲ್ಲ. ಇದರ ಜತೆಗೆ 304 ಮಂದಿ ಫಲಾನುಭವಿಗಳು ಈಗಾಗಲೇ ಮೃತಪಟ್ಟಿದ್ದರೂ ಅವರ ಹೆಸರಿನಲ್ಲಿ ಯೋಜನೆಯ ಹಣ ಬಿಡುಗಡೆ ಆಗುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಒಟ್ಟು 4,225 ಮಂದಿಯನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ಅನರ್ಹರನ್ನು ಡಿಲಿಟ್ ಮಾಡಿಸುವ ಕೆಲಸ ನಡೆದಿದೆ ಎಂದು ಇಲಾಖೆ ಅಧಿಕಾರಿಗಳು ಕನ್ನಡಪ್ರಭ ಕ್ಕೆ ತಿಳಿಸಿದ್ದಾರೆ.&lt;/p&gt;&lt;p&gt;ಈ ಕುರಿತು ಪ್ರತಿಕ್ರಿಯಿಸಿರುವ ಇಲಾಖೆ ಅಧಿಕಾರಿಗಳು, ಅನರ್ಹರನ್ನು ಪತ್ತೆ ಮಾಡಿ ಯೋಜನೆ ಪಟ್ಟಿಯಿಂದ ತೆಗೆದು ಹಾಕುತ್ತಿರುವುದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಾಗೂ ವರ್ಷಕ್ಕೆ ಕೋಟ್ಯಂತರ ರುಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಖಜಾನೆಯ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡಕ್ಕೂ ಮುಕ್ತಿ ದೊರೆತಂತಾಗಿದೆ ಎಂದರು.&lt;/p&gt;&lt;p&gt;ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ₹2 ಸಾವಿರ ನೆರವು ನೀಡಲಾಗುತ್ತಿದೆ. ಯೋಜನೆ ಆರಂಭವಾದ ಬಳಿಕ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡಿದರೂ, ಕೆಲ ಅನರ್ಹರು ಹಾಗೂ ದಾಖಲೆಗಳಲ್ಲಿ ಉಳಿದಿರುವ ಮೃತರ ಹೆಸರಿನಲ್ಲಿ ಸಹ ಸೌಲಭ್ಯ ಮುಂದುವರಿದಿರುವುದು ಆಡಳಿತಾತ್ಮಕ ಲೋಪಗಳತ್ತ ಬೆರಳು ತೋರಿಸಿದೆ.&lt;/p&gt;&lt;p&gt;ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿ 2,94,857 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಯೋಜನೆಯ ಪಾರದರ್ಶಕತೆ ಕಾಪಾಡಲು ಹಾಗೂ ನಿಜವಾದ ಅರ್ಹರಿಗೆ ಸೌಲಭ್ಯ ತಲುಪಿಸಲು ಮುಂದಿನ ದಿನಗಳಲ್ಲಿಯೂ ನಿರಂತರ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಅನರ್ಹರನ್ನು ಹೊರಗಿಡುವ ಮೂಲಕ ಸರ್ಕಾರದ ವೆಚ್ಚ ನಿಯಂತ್ರಣಕ್ಕೆ ನೆರವಾಗಿರುವ ಈ ಕ್ರಮ, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಹೊಸ ಮಾದರಿಯಾಗುವ ಸಾಧ್ಯತೆ ಇದೆ.&lt;/p&gt;&lt;p&gt;ನಿರಂತರ ಪ್ರಕ್ರಿಯೆ: ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರನ್ನು ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆದಿದೆ. ಇದು ನಿರಂತರವಾದ ಪ್ರಕ್ರಿಯೆಯಾಗಿದ್ದು ಮೃತರ ಖಾತೆಗೆ ಸಂದಾಯ ಹಣವನ್ನು ಸರ್ಕಾರಕ್ಕೆ ವಾಪಸ್ ಕಳಿಸುವ ಕೆಲಸ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಮಕೃಷ್ಣ ನಾಯಕ ಹೇಳಿದರು&lt;/p&gt;]]></content:encoded>
            <category>ballari</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/4-225-ineligible-people-in-grihalakshmi-scheme-in-bellari-rav/articleshow-xpas2un"/>
        </item>
        <item>
            <title><![CDATA[ಬೆಂಗಳೂರು: ಹಲಸಿನ ಹಣ್ಣಿನ ಆಸೆಗಾಗಿ ಮರ ಹತ್ತಿದ ಪ್ರಶಸ್ತಿ ವಿಜೇತ ಬಳ್ಳಾರಿ ಮೂಲದ ಜಿಕೆವಿಕೆ ಕೃಷಿ ವಿದ್ಯಾರ್ಥಿ ಸಾವು!]]></title>
            <link>https://kannada.asianetnews.com/karnataka-districts/award-winning-gkvk-bengaluru-msc-agriculture-student-akash-dies-falling-from-tree-gdp/articleshow-zydgxy2</link>
            <guid isPermaLink="true">https://kannada.asianetnews.com/karnataka-districts/award-winning-gkvk-bengaluru-msc-agriculture-student-akash-dies-falling-from-tree-gdp/articleshow-zydgxy2</guid>
            <pubDate>Fri, 05 Jun 2026 19:23:22 +0530</pubDate>
            <description><![CDATA[ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ಆವರಣದಲ್ಲಿ ಹಲಸಿನ ಹಣ್ಣು ಕೀಳಲು ಮರ ಹತ್ತಿದ್ದ ಎಂ.ಎಸ್ಸಿ ವಿದ್ಯಾರ್ಥಿ ಆಕಾಶ್, ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ. ರಾಷ್ಟ್ರಪತಿ ಪ್ರಶಸ್ತಿ ವಿಜೇತ, ಪ್ರತಿಭಾವಂತನಾಗಿದ್ದ ಈ ಯುವಕನ ಅಕಾಲಿಕ ಮರಣವು ಎಲ್ಲೆಡೆ ಶೋಕವನ್ನುಂಟುಮಾಡಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktc0sy7h38bppqeh4p624w1w,imgname-msc-agriculture-student-akash-dies-1780667447537.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜಧಾನಿಯ ಪ್ರತಿಷ್ಠಿತ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ಆವರಣದಲ್ಲಿ ಮಧ್ಯರಾತ್ರಿ ಭೀಕರ ದುರಂತವೊಂದು ನಡೆದಿದೆ. ಹಲಸಿನ ಹಣ್ಣು ಕೀಳಲು ಹೋಗಿ ಮರದಿಂದ ಕೆಳಗೆ ಬಿದ್ದ ಕೃಷಿ ವಿಶ್ವವಿದ್ಯಾಲಯದ ಎಂ.ಎಸ್ಸಿ (M.Sc Agriculture) ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನವರಾದ ಆಕಾಶ್ (23) ಮೃತಪಟ್ಟ ದುರ್ದೈವಿಯಾಗಿದ್ದಾನೆ.&lt;/p&gt;&lt;p&gt;ರೈತಾಪಿ ಕುಟುಂಬದಿಂದ ಬಂದು, ಕಷ್ಟಪಟ್ಟು ಓದಿ ಸರ್ಕಾರಿ ಸೀಟು ಪಡೆದುಕೊಂಡು ಬೆಂಗಳೂರಿನಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಹಲಸಿನ ಹಣ್ಣಿನ ಸಣ್ಣ ಆಸೆಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವುದು ಇಡೀ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ.&lt;/p&gt;&lt;h2&gt;ಮಧ್ಯರಾತ್ರಿ ನಡೆದಿದ್ದೇನು?&lt;/h2&gt;&lt;p&gt;ಪೊಲೀಸ್ ಮೂಲಗಳ ಪ್ರಕಾರ, ಈ ಘಟನೆಯು ರಾತ್ರಿ 12:00 ರಿಂದ 1:00 ಗಂಟೆಯ ಅವಧಿಯಲ್ಲಿ ಜಿಕೆವಿಕೆ ಕ್ಯಾಂಪಸ್ ಆವರಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿ ಆಕಾಶ್ ಮರದಲ್ಲಿದ್ದ ಹಲಸಿನ ಹಣ್ಣನ್ನು ಕೀಳುವ ಆಸೆಯಿಂದ ಜಿಕೆವಿಕೆ ಆವರಣದ ದೊಡ್ಡ ಮರವನ್ನು ಹತ್ತಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿಯ ಕತ್ತಲಿನಲ್ಲಿ ಆಯತಪ್ಪಿ ಮರದ ಮೇಲಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ರಭಸಕ್ಕೆ ಆಕಾಶ್ ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರವಾದ ಪೆಟ್ಟಾಗಿದೆ.&lt;/p&gt;&lt;p&gt;ಘಟನೆಯ ವಿಷಯ ತಿಳಿಯುತ್ತಿದ್ದಂತೆ ಆಕಾಶ್ ಜೊತೆಯಲ್ಲಿದ್ದ ಸ್ನೇಹಿತರು ಮತ್ತು ಸಹಪಾಠಿಗಳು ತಕ್ಷಣವೇ ಆತನನ್ನು ರಕ್ಷಿಸಿ, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಮೃತಪಟ್ಟಿದ್ದಾನೆ.&lt;/p&gt;&lt;h2&gt;ರಾಷ್ಟ್ರಪತಿ ಪ್ರಶಸ್ತಿ ವಿಜೇತ ಪ್ರತಿಭಾವಂತ ಯುವಕ!&lt;/h2&gt;&lt;p&gt;ಮೃತ ಆಕಾಶ್ ಕೇವಲ ಓದಿನಲ್ಲಿ ಮಾತ್ರವಲ್ಲದೆ ಇತರೆ ಚಟುವಟಿಕೆಗಳಲ್ಲೂ ಅತ್ಯಂತ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದನು. ಕಾಲೇಜಿನ ಎನ್.ಎಸ್.ಎಸ್ (NSS) ವಿಭಾಗದಲ್ಲಿ ಅತ್ಯುತ್ತಮ ಸ್ವಯಂಸೇವಕನಾಗಿ ಗುರುತಿಸಿಕೊಂಡಿದ್ದ ಈತನಿಗೆ ರಾಷ್ಟ್ರಪತಿಯವರಿಂದ &quot;ಉತ್ತಮ ಸ್ವಯಂಸೇವಕ&quot; ಪ್ರಶಸ್ತಿ ಲಭಿಸಿತ್ತು. ಅಷ್ಟೇ ಅಲ್ಲದೆ, 2024 ರ ಗಣರಾಜ್ಯೋತ್ಸವದ (Republic Day Parade) ಪರೇಡ್&zwnj;ನಲ್ಲಿ ಕರ್ನಾಟಕ ರಾಜ್ಯವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಕೀರ್ತಿ ತಂದಿದ್ದನು. ಬಡತನದ ಹಿನ್ನೆಲೆಯುಳ್ಳ ರೈತ ಕುಟುಂಬದಿಂದ ಬಂದಿದ್ದ ಆಕಾಶ್, ಇಡೀ ಗ್ರಾಮಕ್ಕೆ ಹಾಗೂ ಕಾಲೇಜಿಗೆ ಹೆಮ್ಮೆಯಾಗಿದ್ದನು. ಆತನ ಅಕಾಲಿಕ ಮರಣವು ಕುಟುಂಬದ ದೊಡ್ಡ ಶಕ್ಷಿಯನ್ನೇ ಕಳೆದುಕೊಂಡಂತಾಗಿದೆ.&lt;/p&gt;&lt;h2&gt;ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಯಲಹಂಕ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಕೆವಿಕೆ ಆವರಣದಲ್ಲಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಮೃತರ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಯಲಹಂಕ ಪೊಲೀಸರು ಮಾಹಿತಿ ರವಾನಿಸಿದ್ದಾರೆ. ಈ ದುರಂತ ಘಟನೆಗೆ ಸಂಬಂಧಿಸಿದಂತೆ ಸದ್ಯ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.&lt;/p&gt;]]></content:encoded>
            <category>ballari</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/award-winning-gkvk-bengaluru-msc-agriculture-student-akash-dies-falling-from-tree-gdp/articleshow-zydgxy2"/>
        </item>
    </channel>
</rss>
