<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 15:58:39 +0530</lastBuildDate>
        <atom:link href="https://kannada.asianetnews.com/rss/belagavi" rel="self" type="application/rss+xml"/>
        <item>
            <title><![CDATA[ಬೆಳಗಾವಿ, ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸವದತ್ತಿ ಯಾತ್ರಾರ್ಥಿಗಳ ವಾಹನ ಪಲ್ಟಿ, ಹಿರಿಯೂರಿನಲ್ಲಿ ಲಾರಿ-ಕಾರು ಡಿಕ್ಕಿ!]]></title>
            <link>https://kannada.asianetnews.com/crime/belagavi-chitradurga-accidents-vehicle-overturns-after-saundatti-visit/articleshow-y846qa8</link>
            <guid isPermaLink="true">https://kannada.asianetnews.com/crime/belagavi-chitradurga-accidents-vehicle-overturns-after-saundatti-visit/articleshow-y846qa8</guid>
            <pubDate>Sat, 10 Jan 2026 22:56:03 +0530</pubDate>
            <description><![CDATA[ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿವೆ. ಸವದತ್ತಿ ಯಲ್ಲಮ್ಮನ ದರ್ಶನ ಮುಗಿಸಿ ಬರುತ್ತಿದ್ದ ಯಾತ್ರಾರ್ಥಿಗಳ ವಾಹನ ಪಲ್ಟಿಯಾಗಿ ಏಳು ಮಂದಿ ಗಾಯಗೊಂಡರೆ, ಹಿರಿಯೂರಿನಲ್ಲಿ ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kemdmc0a11vnk2f7059nh5ve,imgname-----------------------2026-01-10t222642.725-1768064430090.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಸಾವು-ನೋವುಗಳಾಗಿವೆ. ದೈವದರ್ಶನ ಮುಗಿಸಿ ಬರುತ್ತಿದ್ದ ಯಾತ್ರಾರ್ಥಿಗಳು ಗಾಯಗೊಂಡಿದ್ದರೆ, ಮತ್ತೊಂದೆಡೆ ಲಾರಿ ಮತ್ತು ಕಾರಿನ ನಡುವಿನ ಡಿಕ್ಕಿಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.&lt;/p&gt;&lt;h2&gt;ಸವದತ್ತಿ ಯಲ್ಲಮ್ಮನ ದರ್ಶನ ಮುಗಿಸಿ ಬರುತ್ತಿದ್ದಾಗ ಅಪಘಾತ&lt;/h2&gt;&lt;p&gt;ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರಾರ್ಥಿಗಳಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ದರ್ಶನ ಮುಗಿಸಿಕೊಂಡು ಬೆಳಗಾವಿ ನಗರದತ್ತ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕನ ಅಚಾತುರ್ಯದಿಂದ ವಾಹನವು ರಸ್ತೆಯಲ್ಲೇ ಉರುಳಿಬಿದ್ದಿದೆ.&lt;/p&gt;&lt;p&gt;&lt;img&gt;&lt;/p&gt;&lt;h3&gt;ಏಳು ಯಾತ್ರಾರ್ಥಿಗಳಿಗೆ ಗಾಯ: ಆಸ್ಪತ್ರೆಗೆ ದಾಖಲು&lt;/h3&gt;&lt;p&gt;ವಾಹನ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಏಳು ಮಂದಿ ಯಾತ್ರಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರೆಲ್ಲರೂ ಬೆಳಗಾವಿಯ ಶಹಾಪುರ ನಿವಾಸಿಗಳೆಂದು ಗುರುತಿಸಲಾಗಿದ್ದು, ಎಲ್ಲರನ್ನೂ ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;h2&gt;ರಾಜ್ಯ ಹೆದ್ದಾರಿಯಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ&lt;/h2&gt;&lt;p&gt;ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ಯಮರೂಪಿಯಾಗಿ ಬಂದ ಲಾರಿ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ರಕ್ತದ ಮಡುವಿನಲ್ಲಿ ಯುವಕರು ಸಿಲುಕಿಕೊಂಡಿದ್ದರು.&lt;/p&gt;&lt;p&gt;&lt;img&gt;&lt;/p&gt;&lt;h3&gt;ನಾಲ್ವರು ಯುವಕರ ದಾರುಣ ಅಂತ್ಯ&lt;/h3&gt;&lt;p&gt;ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಳಿಕ ತೀವ್ರ ಗಾಯಗೊಂಡಿದ್ದ ಉಳಿದಿಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್ (22), ನಂಜುಂಡಿ (23), ರಾಹಲ್ (23) ಹಾಗೂ ಯಶ್ವಂತ್ (22) ಎಂದು ಗುರುತಿಸಲಾಗಿದೆ. ಹತ್ತಿರದ ಗ್ರಾಮದವರೇ ಆದ ಯುವಕರ ಸಾವಿನಿಂದ ನಂಜಯ್ಯನಕೊಟ್ಟಿಗೆ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;strong&gt;ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು&lt;/strong&gt;&lt;/p&gt;&lt;p&gt;ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಸಿಪಿಐ ಆನಂದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅತಿ ವೇಗವೋ ಅಥವಾ ಅಚಾತುರ್ಯವೋ ಎಂಬ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Ravi Janekal</dc:creator>
            <atom:link href="https://kannada.asianetnews.com/crime/belagavi-chitradurga-accidents-vehicle-overturns-after-saundatti-visit/articleshow-y846qa8"/>
        </item>
        <item>
            <title><![CDATA[ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ 4500 ಕೋಟಿ ವಂಚನೆ ಪ್ರಕರಣ, ಈಗ ಹುಬ್ಬಳ್ಳಿ ಜನರಿಗೆ ಶಿವಾನಂದನದ್ದೇ ಚಿಂತೆ!]]></title>
            <link>https://kannada.asianetnews.com/gallery/karnataka-districts/belagavi-rs4500-cr-scam-cid-probes-hubballi-roots-of-shivam-associates-owner-shivanand-neelannavar-gdp-0tl9g8z</link>
            <guid isPermaLink="true">https://kannada.asianetnews.com/gallery/karnataka-districts/belagavi-rs4500-cr-scam-cid-probes-hubballi-roots-of-shivam-associates-owner-shivanand-neelannavar-gdp-0tl9g8z</guid>
            <pubDate>Wed, 20 May 2026 18:56:37 +0530</pubDate>
            <description><![CDATA[ಬಹುಕೋಟಿ ಹಗರಣದಲ್ಲಿ ಬಂಧಿತನಾದ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ, ಹುಟ್ಟೂರು ಹುಬ್ಬಳ್ಳಿಯೊಂದಿಗೂ ನಂಟು ಹೊಂದಿದ್ದ. ಈತನ ಆ್ಯಪ್&zwnj;ನಲ್ಲಿ ಹುಬ್ಬಳ್ಳಿಯವರೂ ಹೂಡಿಕೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಐಡಿ ತನಿಖೆ ಹುಬ್ಬಳ್ಳಿಯತ್ತ ಮುಖ ಮಾಡುವ ಸಾಧ್ಯತೆ ಇದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krq5p94ds86m971jxpgm633f,imgname-5-1778894185613.png" type="image/jpeg" height="390" width="690"/>
            <content:encoded><![CDATA[ಬಹುಕೋಟಿ ಹಗರಣದಲ್ಲಿ ಬಂಧಿತನಾದ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ, ಹುಟ್ಟೂರು ಹುಬ್ಬಳ್ಳಿಯೊಂದಿಗೂ ನಂಟು ಹೊಂದಿದ್ದ. ಈತನ ಆ್ಯಪ್&zwnj;ನಲ್ಲಿ ಹುಬ್ಬಳ್ಳಿಯವರೂ ಹೂಡಿಕೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಐಡಿ ತನಿಖೆ ಹುಬ್ಬಳ್ಳಿಯತ್ತ ಮುಖ ಮಾಡುವ ಸಾಧ್ಯತೆ ಇದೆ.&lt;img&gt;&lt;p&gt;ಹುಬ್ಬಳ್ಳಿ: ಬಹುಕೋಟಿ ಹಗರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿರುವ ಶಿವಂ ಅಸೋಸಿಯೇಟ್ಸ್&zwnj;ನ ಮಾಲೀಕ ಶಿವಾನಂದ ನೀಲಣ್ಣವರ ಊರು ಬಿಟ್ಟಿದ್ದರೂ ಹುಬ್ಬಳ್ಳಿಯಲ್ಲಿನ ನಂಟು ಬಿಟ್ಟಿರಲಿಲ್ಲ. ಆಗಾಗ ಹುಬ್ಬಳ್ಳಿಗೂ ಬರುತ್ತಿದ್ದ. ಹೀಗಾಗಿ ಹುಬ್ಬಳ್ಳಿಗರಿಂದಲೂ ತನ್ನ ಆ್ಯಪ್&zwnj; ಮೂಲಕ ಹೂಡಿಕೆ ಮಾಡಿಸಿದ್ದು, ದುಡ್ಡು ಕಳೆದುಕೊಂಡವರಲ್ಲಿ ಇಲ್ಲೂ ಇದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಪ್ರಕರಣ ಕೈಗತ್ತಿಕೊಂಡಿರುವ ಸಿಐಡಿ ಪೊಲೀಸರು ತನಿಖೆಗಾಗಿ ಹುಬ್ಬಳ್ಳಿಯತ್ತ ಮುಖ ಮಾಡುವ ಸಾಧ್ಯತೆ ಇದೆ.&lt;/p&gt;&lt;img&gt;&lt;p&gt;ಶಿವಾನಂದ ನೀಲಣ್ಣವರ ಇಲ್ಲಿನ ಉಣಕಲ್&zwnj; ದುರ್ಗದ ಓಣಿಯವ. ಇಲ್ಲೇ ಐಸ್ಕ್ರಿಂ ಮಾರುತ್ತಿದ್ದ. ಈತನ ತಂದೆ ತೀರಿದ ಬಳಿಕ ಈತನ ಸಹೋದರನಿಗೆ ಹೆಸ್ಕಾಂನಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಸಿಕ್ಕಿದ್ದು, ಇಡೀ ಕುಟುಂಬ ಬೆಳಗಾವಿಗೆ ಹೋಗಿ ಸೆಟ್ಲ್&zwnj; ಆಗಿದೆ. ಆದರೆ, ಅಲ್ಲಿಗೆ ಹೋಗಿ ನೆಲೆಸಿದ್ದರೂ ಕೂಡ ಹುಬ್ಬಳ್ಳಿಯೊಂದಿಗಿನ ನಂಟು ಮಾತ್ರ ಬಿಟ್ಟಿರಲಿಲ್ಲ.&lt;/p&gt;&lt;img&gt;&lt;p&gt;ನೀಲಣ್ಣವರ ಎಂಬ ಅಡ್ರೆಸ್&zwnj; ಹೊಂದಿರುವ ಮನೆತನಗಳು ನಗರದಲ್ಲಿ ಸಾಕಷ್ಟಿವೆ. ಕೆಲವೊಂದಿಷ್ಟು ಜನ ಅವರ ದೂರದ ಸಂಬಂಧಿಕರಿದ್ದಾರೆ. ಹೀಗಾಗಿ ಸಂಬಂಧಿಕರ ಮದುವೆ ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮ ಅಥವಾ ಅಶುಭ ಕಾರ್ಯಕ್ರಮಕ್ಕೆ ಶಿವಾನಂದ ಹುಬ್ಬಳ್ಳಿಗೆ ಬರುತ್ತಿದ್ದನಂತೆ. ಆಗಾಗ ಬರುತ್ತಿದ್ದ ಶಿವಾನಂದ ಉಣಕಲ್&zwnj;ನ ದೇವಸ್ಥಾನವೊಂದರ ಜಾತ್ರಾ ಮಹೋತ್ಸವಕ್ಕೆ ಇತ್ತೀಚಿಗೆ ದೇಣಿಗೆ ಕೂಡ ನೀಡಿದ್ದನಂತೆ. ಜಾತ್ರಾ ಮಹೋತ್ಸವದಲ್ಲೂ ಭಾಗವಹಿಸಿದ್ದನೆಂದು ಮೂಲಗಳು ತಿಳಿಸುತ್ತವೆ.&lt;/p&gt;&lt;img&gt;&lt;p&gt;ಸದ್ಯ ಈತ 35 ಸಾವಿರ ಜನರಿಂದ ₹ 4500 ಕೋಟಿ ಹೂಡಿಕೆ ಮಾಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ತನಿಖೆ ಮುಂದುವರಿಯುತ್ತಿದ್ದಂತೆ ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯುಂಟು. ಅದರಲ್ಲಿ ಹುಬ್ಬಳ್ಳಿಯವರು ಹೂಡಿಕೆ ಮಾಡಿದ್ದಾರೆಯೇ? ಮಾಡಿದ್ದರೆ ಎಷ್ಟು ಜನ ಮಾಡಿರಬಹುದು? ಎಂಬ ಪ್ರಶ್ನೆ ಕಾಡುತ್ತಿದೆ. ಆದರೆ, ಹೂಡಿಕೆ ಮಾಡಿದವರು ತಾವೇ ಹೂಡಿಕೆ ಮಾಡಿದ್ದೇವೆ ಎಂದು ಈ ವರೆಗೂ ಬಂದು ಹೇಳಿಕೊಳ್ಳುತ್ತಿಲ್ಲ. ಇದಕ್ಕೆ ಭಯವೂ ಕಾರಣವಿರಬಹುದು ಎಂಬ ವಿಶ್ಲೇಷಣೆ ಕೂಡ ಕೇಳಿ ಬರುತ್ತಿದೆ. ಈ ಕಾರಣದಿಂದ ತನಿಖೆಗಾಗಿ ಸಿಐಡಿ ಪೊಲೀಸರು ಹುಬ್ಬಳ್ಳಿಗೂ ಬರುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಒಟ್ಟಿನಲ್ಲಿ ಬೆಳಗಾವಿಯಲ್ಲಿ ಘಟನೆ ನಡೆದರೂ ಅದರಷ್ಟೇ ಚರ್ಚೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದಂತೂ ಸತ್ಯ.&lt;/p&gt;&lt;img&gt;&lt;p&gt;ಅತ್ತ ನೀಲಣ್ಣವರ ಬಂಧನವಾಗುತ್ತಿದ್ದಂತೆ ಇತ್ತ ಇಲ್ಲಿನ ಈ ಹೆಸರಿನವರಿಗೆ ಮೊಬೈಲ್&zwnj; ಕರೆಗಳ ಸುರಿಮಳೆಯೇ ಬರುತ್ತಿದೆ. ಬೆಳಗಾವಿಯಲ್ಲಿ ಬಂಧನವಾಗಿದೆಯೆಲ್ಲ ಅವರು ನಿಮ್ಮ ಸಂಬಂಧಿಕರಾಕಾ? ನಿಮ್ಮ ಅಡ್ರೆಸ್&zwnj; ಸೇಮ್&zwnj; ಟು ಸೇಮ್&zwnj; ಐತಲಾ ಅದಕ್ಕೆ ಕೇಳಿದೆ.. ಎಂಬೆಲ್ಲ ಪ್ರಶ್ನೆಗಳ ಸುರಿಮಳೆ ಆಗುತ್ತಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/belagavi-rs4500-cr-scam-cid-probes-hubballi-roots-of-shivam-associates-owner-shivanand-neelannavar-gdp-0tl9g8z"/>
        </item>
        <item>
            <title><![CDATA[ಬೆಳಗಾವಿ 4500  ಹಗರಣ: ಶಿವಾನಂದ ನೀಲಣ್ಣವರ್ ಪತ್ನಿ, ನಟ ಅಭಿಲಾಷ್ ಸೇರಿ ವ್ಯವಹಾರ ಪಾಲುದಾರರಿಗೆ ಸಿಐಡಿ ಗ್ರಿಲ್!]]></title>
            <link>https://kannada.asianetnews.com/karnataka-districts/belagavi-shivam-associates-scam-cid-grill-shivanand-neelannavar-his-wife-krv-leader-abhilash-over-luxury-gifts-gdp/articleshow-1gsdq8i</link>
            <guid isPermaLink="true">https://kannada.asianetnews.com/karnataka-districts/belagavi-shivam-associates-scam-cid-grill-shivanand-neelannavar-his-wife-krv-leader-abhilash-over-luxury-gifts-gdp/articleshow-1gsdq8i</guid>
            <pubDate>Wed, 27 May 2026 16:19:44 +0530</pubDate>
            <description><![CDATA[ಬೆಳಗಾವಿಯ 4500 ಕೋಟಿ ರೂ. 'ಶಿವಂ ಅಸೋಸಿಯೇಟ್ಸ್' ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದೆ. ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ್&zwnj;ನನ್ನು ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಆತನ ಪತ್ನಿ, ಪಾಲುದಾರ ಹಾಗೂ ಕರವೇ ಮುಖಂಡರನ್ನೂ ತನಿಖೆಗೆ ಒಳಪಡಿಸಲಾಗಿದೆ. ಹೂಡಿಕೆದಾರರ ಹಣದಿಂದ ಖರೀದಿಸಿದ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡುವ ಪ್ರಕ್ರಿಯೆ ಆರಂಭವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksmggtdar7hxf3nzqanx0hym,imgname-shivanand-neelannavar-1779878619560.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ 'ಶಿವಂ ಅಸೋಸಿಯೇಟ್ಸ್' ಸಂಸ್ಥೆಯ ಬಹುಕೋಟಿ 4500 ರೂ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ (CID) ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ, ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ್&zwnj;ನನ್ನು ಬೆಂಗಳೂರಿನಲ್ಲಿ ಹಲವು ದಿನಗಳ ಕಾಲ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದ ಸಿಐಡಿ ಪೊಲೀಸರು, ಸೋಮವಾರ ತಡರಾತ್ರಿ ಆತನನ್ನು ಬೆಳಗಾವಿಗೆ ಕರೆತಂದಿದ್ದಾರೆ. ಸದ್ಯ &amp;nbsp;ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದ್ದು, ಹಗರಣದ ಆಳ-ಅಗಲ ತಿಳಿಯಲು ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.&lt;/p&gt;&lt;h2&gt;ಕಸ್ಟಡಿ ಅಂತ್ಯ: ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ&lt;/h2&gt;&lt;p&gt;ಆರೋಪಿ ಶಿವಾನಂದ ನೀಲಣ್ಣವರ್&zwnj;ನನ್ನು ನ್ಯಾಯಾಲಯವು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿತ್ತು. ಈ ಕಸ್ಟಡಿ ಅವಧಿಯು ಮೇ 27ರ ಇಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತನಿಖಾ ಪ್ರಕ್ರಿಯೆಗಳನ್ನು ವೇಗಗೊಳಿಸಿರುವ ಅಧಿಕಾರಿಗಳು, ಕಸ್ಟಡಿ ಅವಧಿ ಮುಗಿಯುವುದಕ್ಕಿಂತ ಒಂದು ದಿನ ಮುಂಚಿತವಾಗಿ, ಅಂದರೆ ಮಂಗಳವಾರವೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದರು.&lt;/p&gt;&lt;h2&gt;ಕರವೇ ಮುಖಂಡ, ಪತ್ನಿ ಹಾಗೂ ಪಾಲುದಾರನಿಗೆ ಸಿಐಡಿ ಡ್ರಿಲ್!&lt;/h2&gt;&lt;p&gt;ಈ ಬೃಹತ್ ವಂಚನೆ ಹಗರಣದ ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದಾರೆ. ಪ್ರಕರಣದಲ್ಲಿ ನಂಟು ಹೊಂದಿರುವ ಶಂಕೆಯ ಮೇರೆಗೆ ಮೂವರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿತ್ತು.&lt;/p&gt;&lt;p&gt;ಶಿವಾನಂದ ನೀಲಣ್ಣವರ್ ಪತ್ನಿ, &amp;nbsp;ಜೊತೆಗೆ ನಟ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಮತ್ತು ಶಿವಾನಂದನ ವ್ಯವಹಾರ ಪಾಲುದಾರ ಸುಭಾಷ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಐಡಿ ನೋಟಿಸ್&zwnj;ಗೆ ಬೆದರಿದ ಈ ಮೂವರೂ ಮಂಗಳವಾರ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾದರು. ಈ ವೇಳೆ ಅಧಿಕಾರಿಗಳು ಹೂಡಿಕೆದಾರರ ಹಣದ ವರ್ಗಾವಣೆ ಕುರಿತು ಗಂಟೆಗಳ ಕಾಲ ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಿ, ಮಹತ್ವದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.&lt;/p&gt;&lt;h2&gt;ಮರ್ಸಿಡಿಸ್ ಕಾರ್ ಉಡುಗೊರೆ ರಹಸ್ಯ:&lt;/h2&gt;&lt;p&gt;ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಕರವೇ ಮುಖಂಡ ಆರ್. ಅಭಿಲಾಷ್ ಅವರಿಗೆ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರ್ ಸೇರಿದಂತೆ ಹಲವು ದುಬಾರಿ ಉಡುಗೊರೆಗಳು ಸಂದಾಯವಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅಭಿಲಾಷ್ ಅವರಿಗೆ ತೀವ್ರ ಕೌಂಟರ್ ಪ್ರಶ್ನೆಗಳನ್ನು ಹಾಕಿ, ಉಡುಗೊರೆಯ ಹಿಂದಿನ ಅಸಲಿ ನಿಗೂಢತೆಯನ್ನು ಕೆದಕುತ್ತಿದ್ದಾರೆ.&lt;/p&gt;&lt;h2&gt;ಐಷಾರಾಮಿ ಕಾರುಗಳ ಜಪ್ತಿ ಪ್ರಕ್ರಿಯೆ ಆರಂಭ; ಡಿಜಿಟಲ್ ಸಾಕ್ಷ್ಯಗಳ ಬೇಟೆ&lt;/h2&gt;&lt;p&gt;ಬಡ ಮತ್ತು ಮಧ್ಯಮ ವರ್ಗದ ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ವಂಚಿಸಿ, ಆ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಸಿಐಡಿ ಮುಂದಾಗಿದೆ. ಹೂಡಿಕೆದಾರರ ಹಣವನ್ನು ದುರ್ಬಳಕೆ ಮಾಡಿಕೊಂಡು ಖರೀದಿಸಲಾಗಿದೆ ಎನ್ನಲಾದ ಲ್ಯಾಂಡ್ ರೋವರ್ ಡಿಫೆಂಡರ್, ಮರ್ಸಿಡಿಸ್ ಬೆಂಜ್ ಮತ್ತು ಟೊಯೋಟಾ ವೆಲ್&zwnj;ಫೈರ್ ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಐಷಾರಾಮಿ ಕಾರುಗಳ ಖರೀದಿ ದಾಖಲೆಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ. ಸದ್ಯ ಈ ವಾಹನಗಳನ್ನು ಕಾನೂನುಬದ್ಧವಾಗಿ ಜಪ್ತಿ (ಸೀಜ್) ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ.&lt;/p&gt;&lt;h2&gt;ಹಣದ ಹರಿವಿನ ಪತ್ತೆ :&lt;/h2&gt;&lt;p&gt;ಶಿವಂ ಅಸೋಸಿಯೇಟ್ಸ್ ಕಚೇರಿಗಳ ಮೇಲೆ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿರುವ ನೂರಾರು ಆಸ್ತಿ ಪತ್ರಗಳು, ಕಂಪ್ಯೂಟರ್&zwnj;ಗಳು, ಲ್ಯಾಪ್&zwnj;ಟಾಪ್&zwnj;ಗಳು ಮತ್ತು ಮೊಬೈಲ್ ಫೋನ್&zwnj;ಗಳನ್ನು ಸೈಬರ್ ತಜ್ಞರ ನೆರವಿನೊಂದಿಗೆ ಪರಿಶೀಲಿಸಲಾಗುತ್ತಿದೆ. ಸಂಸ್ಥೆಯ ಬ್ಯಾಂಕ್ ಖಾತೆಗಳ ನಿರ್ವಹಣೆ, ಕಪ್ಪು ಹಣದ ಹೂಡಿಕೆ ಜಾಲ, ವಿವಿಧ ಸಾಂಸ್ಕೃತಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಿಗೆ ಹರಿದುಬಂದ ಹಣದ ಮೂಲ ಯಾವುದು? ಎಂಬುದರ ಸಂಪೂರ್ಣ ಚಿತ್ರಣವನ್ನು ಪಡೆಯಲು ಸಿಐಡಿ ತನಿಖಾ ತಂಡ ಜಾಲ ಬೀಸಿದ್ದು, ಮುಂದಿನ ದಿನಗಳಲ್ಲಿ ಇನ್ನು ಹಲವು ಪ್ರಭಾವಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/belagavi-shivam-associates-scam-cid-grill-shivanand-neelannavar-his-wife-krv-leader-abhilash-over-luxury-gifts-gdp/articleshow-1gsdq8i"/>
        </item>
        <item>
            <title><![CDATA[ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್ ಪತನ: ಲಖನ್ ಜಾರಕಿಹೊಳಿ ಭವಿಷ್ಯ]]></title>
            <link>https://kannada.asianetnews.com/karnataka-districts/lakhan-jarkiholi-on-siddaramaiah-resignation-at-belagavi-gvd/articleshow-23wzfl0</link>
            <guid isPermaLink="true">https://kannada.asianetnews.com/karnataka-districts/lakhan-jarkiholi-on-siddaramaiah-resignation-at-belagavi-gvd/articleshow-23wzfl0</guid>
            <pubDate>Thu, 28 May 2026 20:43:15 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯದಲ್ಲಿ ಕಾಂಗ್ರೆಸ್&zwnj; ಪತನಕ್ಕೆ ಕಾರಣವಾಗಲಿದೆ. ಪಕ್ಷ ಅಧಃಪತನದ ದಾರಿಗೆ ಹೋಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksqjagpxfhbvfk61dksdj061,imgname-hvj-1779981173468.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮೇ.28): &lt;/strong&gt;ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯದಲ್ಲಿ ಕಾಂಗ್ರೆಸ್&zwnj; ಪತನಕ್ಕೆ ಕಾರಣವಾಗಲಿದೆ. ಪಕ್ಷ ಅಧಃಪತನದ ದಾರಿಗೆ ಹೋಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆಯಲ್ಲಿ 40 ಸ್ಥಾನಗಳನ್ನೂ ಗೆಲ್ಲಲು ಕಾಂಗ್ರೆಸ್&zwnj;ಗೆ ಸಾಧ್ಯವಾಗದು. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಅವರ ನೇತೃತ್ವದಲ್ಲೇ ಕಾಂಗ್ರೆಸ್ ಚುನಾವಣೆಗೆ ಹೋಗಬೇಕಿತ್ತು.&lt;/p&gt;&lt;p&gt;ಸಿದ್ದರಾಮಯ್ಯ ಕುರುಬ ಸಮುದಾಯದ ದೊಡ್ಡ ನಾಯಕರು, ರಾಜ್ಯದ ಮಾಸ್ ಲೀಡರ್. ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದಾಗ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಆಗಿತ್ತು. ಇಂದು ಅದೇ ರೀತಿಯ ಅನ್ಯಾಯ ಕುರುಬ ಸಮುದಾಯಕ್ಕೆ ಆಗಿದೆ ಎಂದು ದೂರಿದರು. ಕಾಂಗ್ರೆಸ್&zwnj; ಪಕ್ಷದ ನಾಯಕರಾದ ವೇಣುಗೋಪಾಲ ಹಾಗೂ ಸುರ್ಜೇವಾಲಾಗೆ ಕನ್ನಡ ಗೊತ್ತಿಲ್ಲ, ರಾಜ್ಯದ ಸಮಸ್ಯೆಗಳ ಅರಿವೂ ಇಲ್ಲ. ಬೆಂಗಳೂರನ್ನು ಬಿಟ್ಟರೇ ಬೇರೆ ಊರುಗಳ ಸ್ಥಿತಿ ಅವರಿಗೆ ತಿಳಿದಿಲ್ಲ. ಆದರೂ ರಾಜ್ಯದ ನಾಯಕತ್ವದ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.&lt;/p&gt;&lt;p&gt;ಕಳೆದ 3 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಯಾರಿಗೂ ತೊಂದರೆ ಆಗದಂತೆ ಸಿದ್ದರಾಮಯ್ಯ ಸಮರ್ಥವಾಗಿ ನಿರ್ವಹಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಅವರ ನಾಯಕತ್ವದಿಂದಲೇ ಜಾರಿಯಾಗಲು ಸಾಧ್ಯವಾಯಿತು. ಈಗ ಅವರನ್ನೇ ಕೆಳಗಿಳಿಸಿದರೆ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಬಹುದು. ಸರ್ಕಾರಿ ನೌಕರರಿಗೆ ಸಂಬಳ ನೀಡುವುದೂ ಕಷ್ಟವಾಗಬಹುದು ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಜ್ವಾಲಾಮುಖಿಯಂತೆ ಸ್ಫೋಟ&lt;/strong&gt;&lt;/h2&gt;&lt;p&gt;ಡಿ.ಕೆ.ಶಿವಕುಮಾರ್ ಈಗಾಗಲೇ ಉಪಮುಖ್ಯಮಂತ್ರಿಯಾಗಿದ್ದಾರೆ. ಹಿರಿಯ ನಾಯಕರಿಗೂ ಸಚಿವ ಸ್ಥಾನಗಳಿವೆ. ಹೀಗಿರುವಾಗ ಹೈಕಮಾಂಡ್ ಜೇನುಗೂಡಿಗೆ ಕೈ ಹಾಕಿದಂತಾಗಿದೆ. ಯಡಿಯೂರಪ್ಪರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ ಬಳಿಕ ಬಿಜೆಪಿಯ ಪರಿಸ್ಥಿತಿ ಏನಾಯಿತು ಎಂಬುವುದು ಎಲ್ಲರಿಗೂ ಗೊತ್ತು. ಈಗ ಕಾಂಗ್ರೆಸ್ ಕೂಡ ಅದೇ ತಪ್ಪು ಮಾಡುತ್ತಿದೆ. ಸಿದ್ದರಾಮಯ್ಯ ಅವರ ಕಣ್ಣೀರು 2028ರಲ್ಲಿ ಜ್ವಾಲಾಮುಖಿಯಂತೆ ಸ್ಫೋಟವಾಗಲಿದೆ. ಅಹಿಂದ ಮತದಾರರು ಕಾಂಗ್ರೆಸ್&zwnj;ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/lakhan-jarkiholi-on-siddaramaiah-resignation-at-belagavi-gvd/articleshow-23wzfl0"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[ಬೆಳಗಾವಿ ವಿಮಾನ ನಿಲ್ದಾಣ ಜುಲೈಗೆ ಪೂರ್ಣ, ನೂತನ ಟರ್ಮಿನಲ್ ಪಿಎಂ ಮೋದಿಯಿಂದ ಉದ್ಘಾಟನೆ]]></title>
            <link>https://kannada.asianetnews.com/gallery/karnataka-districts/belagavi-sambra-airport-new-terminal-to-be-completed-by-july-likely-inauguration-by-pm-narendra-modi-gdp-836nu24</link>
            <guid isPermaLink="true">https://kannada.asianetnews.com/gallery/karnataka-districts/belagavi-sambra-airport-new-terminal-to-be-completed-by-july-likely-inauguration-by-pm-narendra-modi-gdp-836nu24</guid>
            <pubDate>Sun, 17 May 2026 18:23:56 +0530</pubDate>
            <description><![CDATA[&lt;p&gt;ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಟರ್ಮಿನಲ್ ಕಾಮಗಾರಿಯು ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಕಮಲ ಬಸದಿ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಈ ಟರ್ಮಿನಲ್ ಅನ್ನು ಆಗಸ್ಟ್-ಸೆಪ್ಟೆಂಬರ್&zwnj;ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟಿಸಲು ಯೋಜಿಸಲಾಗಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krtzf82mn9pwatyyn9m67a54,imgname-belagavi-airport---4--1779021881428.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಟರ್ಮಿನಲ್ ಕಾಮಗಾರಿಯು ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಕಮಲ ಬಸದಿ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಈ ಟರ್ಮಿನಲ್ ಅನ್ನು ಆಗಸ್ಟ್-ಸೆಪ್ಟೆಂಬರ್&zwnj;ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟಿಸಲು ಯೋಜಿಸಲಾಗಿದೆ. &amp;nbsp;&lt;/p&gt;&lt;img&gt;&lt;p&gt;ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಟರ್ಮಿನಲ್ ಕಾಮಗಾರಿ ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಆಗಸ್ಟ್&zwnj;-ಸೆಪ್ಟೆಂಬರ್ ಮಧ್ಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಗರಿಕರ ವಿಮಾನಯಾನ ಸಚಿವರಿಂದ ವರ್ಚ್ಯುವಲ್ ಮೂಲಕ ಉದ್ಘಾಟನೆಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.&lt;/p&gt;&lt;img&gt;&lt;p&gt;ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೂತನ ಟರ್ಮಿನಲ್ ಕಾಮಗಾರಿ ಪರಿಶೀಲಿಸಿದ ಬಳಿಕ ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರೊಂದಿಗೆ ಶನಿವಾರ ಸಭೆ ನಡೆಸಿ ಮತನಾಡಿದ ಅವರು, ನೂತನ ಟರ್ಮಿನಲ್ ಕಮಲ ಬಸದಿ ಮಾದರಿಯಲ್ಲಿ ಆಗುತ್ತಿದೆ. ಮುಖ್ಯ ರಸ್ತೆ ಚತುಷ್ಪಥ ಆಗಲಿದ್ದು ಜತೆಗೆ ಅಲ್ಲಿಂದ ತಿರುವು ಪಡೆಯುವಾಗಿನ ಪ್ರಮುಖ ರಸ್ತೆಯ ಪ್ರವೇಶ ದ್ವಾರವನ್ನೂ ಆಕರ್ಷವಾಗಿ ಮಾಡಲು ನಿರ್ಧರಿಸಿದ್ದೇವೆ. ಇದಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.&lt;/p&gt;&lt;img&gt;&lt;p&gt;ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಎಸಿ ಬಸ್ ಸೌಲಭ್ಯವಿದೆ. ಅದನ್ನು ಇಲ್ಲೂ ಕೊಡಿ ಎಂದು ವಿಮಾನ ನಿಲ್ದಾಣದ ನಿರ್ದೇಶಕಗೆ ಕೇಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸುವಿಕೆ, ಪ್ರತ್ಯೇಕ ಕಾರ್ಗೋ ಸೌಲಭ್ಯ ಒದಗಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವೂ ಪತ್ರ ಬರೆದು ಕೇಳಿದೆ. ಈ ವಿಚಾರ ಸೇರಿದಂತೆ ಉಡಾನ್ ಯೋಜನೆ ಮರಳಿ ಆರಂಭಿಸುವಂತೆಯೂ ಪ್ರಧಾನಿಗಳ ಗಮನಕ್ಕೆ ತಂದಿದ್ದೇನೆ. ಈಗಾಗಲೇ ನನ್ನ ಮನವಿ ಮೇರೆಗೆ ಇಂಡಿಗೋದವರು ಬೆಳಗಾವಿ-ನವೀ ಮುಂಬೈಗೆ ವಿಮಾನ ಆರಂಭಿಸಿದ್ದಾರೆ.&lt;/p&gt;&lt;img&gt;&lt;p&gt;ಮುಂಬೈಗೆ ಸ್ಟಾರ್ ಏರ್ ವಿಮಾನ ಮತ್ತೆ ಆರಂಭವಾಗಿದೆ. ಆದರೆ, ಅರ್ಧದಷ್ಟು ಮಾತ್ರ ಪ್ರಯಾಣಿಕರು ಭರ್ತಿಯಾಗುತ್ತಿದ್ದಾರೆ. ಆದರೆ, ದೆಹಲಿ, ಬೆಂಗಳೂರು ವಿಮಾನಗಳು ಶೇ.90ರಷ್ಟು ಭರ್ತಿಯಾಗುತ್ತಿವೆ. ಮುಂದೆ ಅಹಮದಾಬಾದ್, ಜೋಧಪುರ್, ಚೆನ್ನೈ ಹಾಗೂ ಪುಣೆಗೆ ಸಂಪರ್ಕಕ್ಕೆ ಬೇಡಿಕೆ ಇದ್ದು, ಇಂಡಿಗೋ ಸಂಸ್ಥೆ ಸಮೀಕ್ಷೆ ನಡೆಸುತ್ತಿದೆ. ಹುಬ್ಬಳ್ಳಿಯಲ್ಲಿ ಸೇವೆ ನೀಡುತ್ತಿರುವ ಫ್ಲೈ 91 ಸಂಸ್ಥೆಯವರಿಗೂ ಇಲ್ಲೂ ಆರಂಭಿಸಿ ಎಂದು ಪತ್ರ ಬರೆದು ಕೇಳಿಕೊಂಡಿದ್ದಾಗಿ ತಿಳಿಸಿದರು.&lt;/p&gt;&lt;img&gt;&lt;p&gt;ನಿಲ್ದಾಣದ ರನ್&zwnj;ವೇ ವಿಸ್ತರಣೆ, ಪ್ಯಾರಲಲ್ ಟ್ಯಾಕ್ಸಿ ಟ್ರ್ಯಾಕ್, ಸುರಕ್ಷತಾ ವ್ಯವಸ್ಥೆಗಳ ಅಭಿವೃದ್ಧಿಗೆ ಸುಮಾರು 15 ಎಕೆರೆ ಜಮೀನು ಅಗತ್ಯವಿದೆ. ಅದು ಭಾರತೀಯ ವಾಯು ಸೇನೆ ಅಧೀನದಲ್ಲಿದ್ದು, ನಮಗೆ ಹಸ್ತಾಂತರ ವಿಳಂಬವಾಗುತ್ತಿದೆ. ಹೀಗಾಗಿ, ಕಾಮಗಾರಿ ಆರಂಭಗೊಂಡಿಲ್ಲ. ವಾಯುಸೇನೆ ಅಧಿಕಾರಿಗಳು ಪ್ರತ್ಯೇಕ ಸಭೆ ಮಾಡಿ ತಿಳಿಸುವುದಾಗಿ ಸಭೆಗೆ ಹೇಳಿದ್ದಾರೆ. ಉಳಿದಂತೆ, ನಿಲ್ದಾಣ ವಿಸ್ತರಣೆಗೆ 72 ಎಕರೆ ಜಾಗದ ಪ್ರಸ್ತಾವನೆ ಜಿಲ್ಲಾಡಳಿತದಿಂದ ಕರ್ನಾಟಕ ಸರ್ಕಾರಕ್ಕೆ ರವಾನಿಸಲಾಗಿದೆ. ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದರು. ಸಲಹಾ ಸಮಿತಿ ಸದಸ್ಯರಾ ರಾಜು ದೇಸಾಯಿ, ಸ್ನೇಹಲ್ ಕೋಲೆಕಾರ, ಜಯಸಿಂಗ್&zwnj; ರಜಪೂತ, ವಿಜಯ ಭದ್ರಾ, ರಾಹುಲ ಮುಚ್ಚಂಡಿ, ಹನುಮಂತ ಕಾಗಲಕರ, ವಿಮಾನ ನಿಲ್ದಾಣ ನಿರ್ದೇಶಕ ಎಸ್.ತ್ಯಾಗರಾಜನ್ ಸಭೆಯಲ್ಲಿ ಇದ್ದರು.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/belagavi-sambra-airport-new-terminal-to-be-completed-by-july-likely-inauguration-by-pm-narendra-modi-gdp-836nu24"/>
        </item>
        <item>
            <title><![CDATA[ಶಿವಾನಂದ ನೀಲಣ್ಣನವರ್ 5 ಕೋಟಿ ಮೌಲ್ಯದ ನಾಲ್ಕು ಐಷಾರಾಮಿ ಕಾರು ಸೀಜ್, ಬೆಳಗಾವಿ ವಂಚನೆ ಕೇಸ್]]></title>
            <link>https://kannada.asianetnews.com/karnataka-districts/belagavi-fraud-probe-police-seize-rs-5-crore-luxury-cars-of-shivanand-neelannavar/articleshow-dzwgf9y</link>
            <guid isPermaLink="true">https://kannada.asianetnews.com/karnataka-districts/belagavi-fraud-probe-police-seize-rs-5-crore-luxury-cars-of-shivanand-neelannavar/articleshow-dzwgf9y</guid>
            <pubDate>Tue, 26 May 2026 16:52:47 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿನ ಬಹುಕೋಟಿ ವಂಚನೆ ಪ್ರಕರಣದ ತನಿಖೆ ತೀವ್ರಗೊಂಡಿದೆ. 45000 ಕೋಟಿ ರೂಪಾಯಿ ಹಗರಣದಲ್ಲಿ ಅರೆಸ್ಟ್ ಆಗಿರುವ ಶಿವಾನಂದ ನೀಲಣ್ಣನವರ್ ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksj0b1za18813edqm17fmdw2,imgname-shivananda-neelannavar-1779794544617.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮೇ.26) &lt;/strong&gt;ಹೂಡಿಕೆ ಮೂಲಕ ಬರೋಬ್ಬರಿ 4500 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಬೆಳಗಾವಿಯ ಶಿವಂ ಅಸೋಸಿಟೇಟ್ ಮಾಲೀಕ ಶಿವಾನಂದ ನೀಲಣ್ಣವರ್ ಸಂಕಷ್ಟ ಹೆಚ್ಚಾಗಿದೆ. ತನಿಖೆ ತೀವ್ರಗೊಳಿಸಿರುವ ಪೊಲೀಸರು ಇದೀಗ ಶಿವಾನಂದನ ನೀಲಣ್ಣನವರ್ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿದ್ದಾರೆ. ಮತ್ತೊಂದೆಡೆ ಸಿಐಡಿ ಕಸ್ಟಡಿಯಲ್ಲಿ ಶಿವಾನಂದ ನೀಲಣ್ಣನವರ್ ಸತತ ವಿಚಾರಣೆ ಎದುರಿಸುತ್ತಿದ್ದಾರೆ. ಜೊತೆಗೆ ಶಿವಾನಂದ ನೀಲಣ್ಣನವರ್ ಜೊತೆಗೆ ವ್ಯವಹರಿಸಿದ್ದ ಕೆಲವರಿಗೂ ನೋಟಿಸ್ ನೀಡಲಾಗಿದೆ.&lt;/p&gt;&lt;h2&gt;5 ಕೋಟಿ ರೂಪಾಯಿ ಮೌಲ್ಯದ ಕಾರು ವಶಕ್ಕೆ&lt;/h2&gt;&lt;p&gt;ಪೊಲೀಸ್ ಕಸ್ಟಡಿಯಲ್ಲಿರುವ ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ ನಾಲ್ಕು ಐಷಾರಾಮಿ ಕಾರುಗಳನ್ನು ಸೀಜ್ ಮಾಡಲಾಗಿದೆ. ಲ್ಯಾಂಡ್ ರೂವರ್ ಡಿಫೆಂಡರ್, ಟೊಯೋಟಾ ವೆಲ್ಫೈ, ಮರ್ಸಿಡಿಸ್ ಎಎಂಜಿ ಕಾರುಗಳನ್ನು ಸೀಜ್ ಮಾಡಲಾಗಿದೆ.&lt;/p&gt;&lt;h2&gt;ಶಿವಾನಂದ ನೀಲಣ್ಣನವರ್ ಪತ್ನಿ ಕಾರು ಸೀಜ್&lt;/h2&gt;&lt;p&gt;ಶಿವಾನಂದ ನೀಲಣ್ಣನವರ್ ಐಷಾರಾಮಿ ಕಾರುಗಳ ಜೊತೆಗೆ ಪತ್ನಿ ಬಳಸುತ್ತಿದ್ದ ಹ್ಯುಂಡೈ ವರ್ನಾ ಕಾರು ಸೀಜ್ ಮಾಡಲಾಗಿದೆ. ಮಹಜರು ಹಾಗೂ ತನಿಖೆ ಕಾರಣದಿಂದ ಸಿಐಡಿ ಪೊಲೀಸರು ಶಿವಾನಂದ ನೀಲಣ್ಣನವರ್ ಅವರನ್ನು ಶಿವಬಸವ ನಗರದ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಐಷಾರಾಮಿ ಕಾರುಗಳನ್ನು ಸೀಜ್ ಮಾಡಿದ್ದಾರೆ.&lt;/p&gt;&lt;h2&gt;ಕರವೇ ಜಿಲ್ಲಾಧ್ಯಕ್ಷನಿಗೆ ನೀಡಿದ ಕಾರು ಸೀಜ್&lt;/h2&gt;&lt;p&gt;ಇದೇ ವೇಳೆ ಪೊಲೀಸರು ಶಿವಾನಂದ ನೀಲಣ್ಣನವರ್ ಜೊತೆ ಸಂಪರ್ಕದಲ್ಲಿದ್ದ ಜೊತೆಗೆ ಕೆಲ ವ್ಯವಹಾರದಲ್ಲಿ ಕೈಜೋಡಿಸಿದವರಿಗೆ ನೋಟಿಸ್ ನೀಡಲಾಗಿದೆ. ಇದೇ ವೇಳೆ ಕರವೇ ಜಿಲ್ಲಾಧ್ಯಕ್ಷ ಅಭಿಲಾಷ್&zwnj;ಗೆ ನೀಡಿದ್ದ ಕಾರನ್ನು ಪೊಲೀಸರು ಸೀಜ್ ಮಾಡಲಾಗಿದೆ.&lt;/p&gt;&lt;p&gt;ಶಿವಾನಂದ ನೀಲಣ್ಣವರ್ ಮನೆಯಲ್ಲಿ ಪೊಲೀಸರು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಹಲವು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಕೆಲ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇತ್ತ ಸೀಜ್ ಮಾಡಿದ ಕಾರುಗಳನ್ನು ಪೊಲೀಸರು ಮಾಳಮಾರುತಿ ಠಾಣೆ ಕರೆದೊಯ್ದಿದ್ದಾರೆ.&lt;/p&gt;&lt;h2&gt;ಮೇ.27ಕ್ಕೆ ಮತ್ತೆ ಕೋರ್ಟ್&zwnj;ಗೆ ಹಾಜರ್&lt;/h2&gt;&lt;p&gt;ಶಿವಾನಂದ ನೀಲಣ್ಣನವರ್ ಅರೆಸ್ಟ್ ಮಾಡಿ ಕೋರ್ಟ್&zwnj;ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ ಹೆಚ್ಚಿನ ವಿಚಾರಣೆಗೆ ತಮಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಇದರಂತೆ 10 ದಿನಗಳ ಕಾಲ ಸಿಐಡಿಗೆ ಕಸ್ಟಡಿಗೆ ನೀಡಲಾಗಿದೆ. ಮೇ.27ರ ಸಂಜೆ 4 ಗಂಟೆಯೊಳಗೆ ಮತ್ತೆ ಕೋರ್ಟ್&zwnj;ಗೆ ಹಾಜರುಪಡಿಸಲು ಸೂಚಿಸಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>belagavi</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/belagavi-fraud-probe-police-seize-rs-5-crore-luxury-cars-of-shivanand-neelannavar/articleshow-dzwgf9y"/>
        </item>
        <item>
            <title><![CDATA[ಬೆಳಗಾವಿಯ ಅಥಣಿಯಿಂದ ಮಹಾರಾಷ್ಟ್ರ, ಆಂಧ್ರಕ್ಕೆ ಹೊಸ ಸಾರಿಗೆ ಬಸ್ ಆರಂಭ, ಅಂತಾರಾಜ್ಯ ಬಸ್ ಸೇವೆಯ ಸಮಯ  ಹೀಗಿದೆ]]></title>
            <link>https://kannada.asianetnews.com/karnataka-districts/karnataka-nwkrtc-launches-athani-to-pune-and-athani-to-kolhapur-interstate-bus-services-gdp/articleshow-esdznq0</link>
            <guid isPermaLink="true">https://kannada.asianetnews.com/karnataka-districts/karnataka-nwkrtc-launches-athani-to-pune-and-athani-to-kolhapur-interstate-bus-services-gdp/articleshow-esdznq0</guid>
            <pubDate>Tue, 26 May 2026 15:53:53 +0530</pubDate>
            <description><![CDATA[ಶಾಸಕ ಲಕ್ಷ್ಮಣ ಸವದಿ ಅವರು ಅಥಣಿಯಿಂದ ನೆರೆಯ ಮಹಾರಾಷ್ಟ್ರದ ಪುಣೆ ಮತ್ತು ಕೊಲ್ಲಾಪುರಕ್ಕೆ ನೂತನ ಅಂತಾರಾಜ್ಯ ಬಸ್ ಸೇವೆಗೆ ಚಾಲನೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಆಂಧ್ರಪ್ರದೇಶದ ಶ್ರೀಶೈಲಂಗೆ ಹಾಗೂ ವಿದ್ಯಾರ್ಥಿಗಳಿಗಾಗಿ ವಿಶೇಷ ಬಸ್ ಸೇವೆ ಆರಂಭಿಸುವ ಭರವಸೆಯನ್ನೂ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01dqgyb51s3bfaag805pmjkwq5,imgname-nwkrtc-bus-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಅಥಣಿ ಸಾರಿಗೆ ಘಟಕದಿಂದ ನೆರೆಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶಕ್ಕೆ ಬಸ್ ಸೌಕರ್ಯ ಆರಂಭಿಸಲಾಗಿದೆ. ಅಥಣಿ ನಾಗರಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.&lt;/p&gt;&lt;h2&gt;ಗಡಿ ದಾಟಿದ ಬಸ್&zwnj;ಗಳು&lt;/h2&gt;&lt;p&gt;ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಥಣಿ-ಪುಣೆ ಮತ್ತು ಅಥಣಿ- ಕೊಲ್ಲಾಪುರ ನೂತನ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿ ಸಾರಿಗೆ ಘಟಕದಿಂದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ, ಮಹಾನಗರಗಳಿಗೆ ಈಗಾಗಲೇ ಸಾರಿಗೆ ಸೇವೆ ಕಲ್ಪಿಸಲಾಗಿದೆ. ಅಥಣಿ ಗಡಿ ಭಾಗದಲ್ಲಿರುವುದರಿಂದ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣ, ಆಂಧ್ರಪ್ರದೇಶಕ್ಕೆ ಜನರು ವಿವಿಧ ವ್ಯವಹಾರಗಳಿಗೆ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುತ್ತಾರೆ. ಆದ್ದರಿಂದ ಮೊದಲ ಹಂತವಾಗಿ ನೆರೆಯ ಮಹಾರಾಷ್ಟ್ರಕ್ಕೆ ಅಂತಾರಾಜ್ಯ ಬಸ್ ಸೇವೆ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದ ಶ್ರೀಶೈಲಂಗೆ ಸೇವೆ ಆರಂಭಿಸಲಾಗುವುದು. ಚಿಕ್ಕೋಡಿ, ಬೆಳಗಾವಿ ಮತ್ತು ವಿಜಯಪುರಕ್ಕೆ ತಡೆರಹಿತ ವಾಹನ ಸೇವೆ ಆರಂಭಿಸಬೇಕು ಎಂಬ ಬೇಡಿಕೆ ಹೆಚ್ಚಾಗಿದ್ದು, ಆದರೆ, ಅಲ್ಲಲ್ಲಿ ಗ್ರಾಮಸ್ಥರು ಮನವಿ ನೀಡಿ ನಿಲುಗಡೆಗೆ ಅವಕಾಶ ಕೇಳುತ್ತಿದ್ದಾರೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮತೆಗೆದುಕೊಳ್ಲಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಅಥಣಿ ಸೇರಿ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸ್ನೇಹಿ ನೂತನ ಸಾರಿಗೆ ಸೇವೆ ಆರಂಭಿಸುವ ಸಂಕಲ್ಪ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಈ ಘಟಕಕ್ಕೆ ಇನ್ನಷ್ಟು ಹೊಸ ಬಸ್&zwnj;ಗಳನ್ನು ಇಲಾಖೆಯಿಂದ ತರುವ ಮೂಲಕ ತಾಲೂಕಿನ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.&lt;/p&gt;&lt;h2&gt;ಬಸ್ ಸಮಯ ಇಂತಿದೆ&lt;/h2&gt;&lt;p&gt;ಚಿಕ್ಕೋಡಿ ವಿಭಾಗೀಯ ಘಟಕದ ನಿಯಂತ್ರಣಾಧಿಕಾರಿ ಮಹಾದೇವ ಮುಂಜೆ ಮಾತನಾಡಿ, ಈ ನೂತನ ಬಸ್&zwnj; ಅಥಣಿ-ಪುಣೆ ಪ್ರತಿದಿನ ಬೆಳಿಗ್ಗೆ ಇಲ್ಲಿಂದ 7.45 ಕ್ಕೆ ಮತ್ತು ಅಥಣಿ-ಕೊಲ್ಲಾಪುರ 7ಕ್ಕೆ ಹೊರಡಲಿದೆ. ಅಥಣಿ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ಪುರಸಭೆ ಸದಸ್ಯ ಕಲ್ಲೇಶ್ ಮಡ್ಡಿ, ಕಾಂಗ್ರೆಸ್ ಮುಖಂಡ ಶ್ಯಾಮ ಪೂಜಾರಿ, ಶ್ರೀನಿವಾಸ ಪಟ್ಟಣ, ಘಟಕದ ವ್ಯವಸ್ಥಾಪಕ ಎನ್.ಎಂ.ಕೇರಿ ಸೇರಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-nwkrtc-launches-athani-to-pune-and-athani-to-kolhapur-interstate-bus-services-gdp/articleshow-esdznq0"/>
        </item>
        <item>
            <title><![CDATA[ಶತಾಯುಷಿ ತಾಯಿಯ ಮೃತದೇಹ ಕಂಡು ಮಗಳು ಸಾವು..!]]></title>
            <link>https://kannada.asianetnews.com/karnataka-districts/daughter-dies-after-mother-death-incident-happens-in-parthanahalli-bagalkote-rav/articleshow-gnfqyfx</link>
            <guid isPermaLink="true">https://kannada.asianetnews.com/karnataka-districts/daughter-dies-after-mother-death-incident-happens-in-parthanahalli-bagalkote-rav/articleshow-gnfqyfx</guid>
            <pubDate>Sun, 31 May 2026 08:12:40 +0530</pubDate>
            <description><![CDATA[ಶತಾಯುಷಿ ತಾಯಿಯ ನಿಧನದ ಸುದ್ದಿ ಕೇಳಿ ಅಂತ್ಯಕ್ರಿಯೆಗೆ ಬಂದ ಮಗಳು, ತಾಯಿಯ ಶವವನ್ನು ಕಂಡು ಆಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksxyf0qk8er0fgcghzf6yjth,imgname-----------------------2026-05-31t080955.453-1780195230451.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾಗವಾಡ (ಮೇ.31):&lt;/strong&gt; ಅಗಲಿದ ತಾಯಿಯ ಕಂಡು ಆಘಾತಕ್ಕೊಳಗಾದ ಮಗಳು ತಾಯಿಯ ಶವದ ಎದುರೇ ಪ್ರಾಣ ಬಿಟ್ಟ ಘಟನೆ ಸಂಭವಿಸಿದೆ. ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮ(Parthanahalli village)ದ 76 ವರ್ಷದ&lt;strong&gt; ಹಣಮವ್ವ ರಾಮು ಮುಜಗೋಣಿ&lt;/strong&gt;(Hanamvva Ramu Mujagoni) ಸಾವನ್ನಪ್ಪಿದ ಮಗಳು.&lt;/p&gt;&lt;h2&gt;ಶತಾಯುಷಿ ತಾಯಿ ಸಾವು ತಂದ ಆಘಾತ&lt;/h2&gt;&lt;p&gt;ಬಾಗಲಕೋಟ(Bagalkote) ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮTodalubagi village(ದಲ್ಲಿ ವಾಸವಾಗಿರುವ ಶತಾಯುಷಿ, ತಾಯಿ&lt;strong&gt; ಗಂಗವ್ವ ಚನ್ನಬಸಪ್ಪ ಪಾರ್ಥಹನಳ್ಳಿ&lt;/strong&gt;(101) ಇವರು ಶುಕ್ರವಾರ ವಯೋಸಹಜವಾಗಿ ನಿಧನರಾಗಿದ್ದರು. ತಾಯಿಯ ಸಾವಿನ ಸುದ್ದಿ ತಿಳಿದು ಹಣಮವ್ವ ಶುಕ್ರವಾರ ತನ್ನ ಮಕ್ಕಳೊಂದಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೊದಲಬಾಗಿಗೆ ತೆರಳಿದ್ದಳು. ಆದರೆ, ಅಲ್ಲಿ ತಾಯಿಯ ಶವ ಕಂಡು ಆಘಾತಕ್ಕೊಳಗಾದ ಹಣಮವ್ವ ಕುಸಿದು ಬಿದ್ದಿದ್ದು, ಆಕೆಯೂ ಸಹ ತಾಯಿಯೊಂದಿಗೆ ಇಹಲೋಕ ತ್ಯಜಿಸಿದ್ದಾರೆ.&lt;/p&gt;&lt;p&gt;ಮೃತ ಹಣುಮವ್ವನನ್ನು ಅಥಣಿ ತಾಲೂಕಿನ ಪಾರ್ಥನಳ್ಳಿ ಗ್ರಾಮಕ್ಕೆ ವಿವಾಹ ಮಾಡಿ ಕೊಟ್ಟಿದ್ದರು. ಅವರಿಗೆ ಮೂರು ಜನ ಗಂಡು ಮಕ್ಕಳು ಅಪಾರ ಬಂಧು ಬಳಗವಿದೆ. ಅವರ ಅಂತ್ಯಕ್ರಿಯೆ ಶನಿವಾರ ನೆರವೇರಿತು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/daughter-dies-after-mother-death-incident-happens-in-parthanahalli-bagalkote-rav/articleshow-gnfqyfx"/>
        </item>
        <item>
            <title><![CDATA[ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್‌ನಿಂದ ಐಷಾರಾಮಿ ಕಾರು ಉಡುಗೊರೆ ಪಡೆದ ಕರವೇ ಜಿಲ್ಲಾಧ್ಯಕ್ಷಗೆ ಸಿಐಡಿ ನೋಟಿಸ್‌!]]></title>
            <link>https://kannada.asianetnews.com/gallery/karnataka-districts/shivam-associates-scam-shivanand-neelannavar-luxury-car-gift-to-karnataka-rakshana-vedike-leder-under-cid-scanner-gdp-gzbo2ug</link>
            <guid isPermaLink="true">https://kannada.asianetnews.com/gallery/karnataka-districts/shivam-associates-scam-shivanand-neelannavar-luxury-car-gift-to-karnataka-rakshana-vedike-leder-under-cid-scanner-gdp-gzbo2ug</guid>
            <pubDate>Tue, 19 May 2026 17:37:16 +0530</pubDate>
            <description><![CDATA[&lt;p&gt;ಶಿವಂ ಅಸೋಸಿಯೇಟ್ಸ್&zwnj;ನ ₹4500 ಕೋಟಿ ಠೇವಣಿ ವಂಚನೆ ಪ್ರಕರಣವು ಹೊಸ ತಿರುವು ಪಡೆದಿದೆ. ಸಾರ್ವಜನಿಕರ ಹಣದಿಂದ ಪ್ರಭಾವಿ ವ್ಯಕ್ತಿಯೊಬ್ಬರಿಗೆ ₹1.5 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ ಶಂಕೆ ವ್ಯಕ್ತವಾಗಿದ್ದು, ಸಿಐಡಿ ಈ ಕುರಿತು ತನಿಖೆ ನಡೆಸುತ್ತಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks01hhp0nx8rf77mkrkn8swz,imgname-shivanand-neelannavar--1--1779191826111.jpg" type="image/jpeg" height="390" width="690"/>
            <content:encoded><![CDATA[&lt;p&gt;ಶಿವಂ ಅಸೋಸಿಯೇಟ್ಸ್&zwnj;ನ ₹4500 ಕೋಟಿ ಠೇವಣಿ ವಂಚನೆ ಪ್ರಕರಣವು ಹೊಸ ತಿರುವು ಪಡೆದಿದೆ. ಸಾರ್ವಜನಿಕರ ಹಣದಿಂದ ಪ್ರಭಾವಿ ವ್ಯಕ್ತಿಯೊಬ್ಬರಿಗೆ ₹1.5 ಕೋಟಿ ಮೌಲ್ಯದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ ಶಂಕೆ ವ್ಯಕ್ತವಾಗಿದ್ದು, ಸಿಐಡಿ ಈ ಕುರಿತು ತನಿಖೆ ನಡೆಸುತ್ತಿದೆ. &amp;nbsp;&lt;/p&gt;&lt;img&gt;&lt;p&gt;ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧದ ₹4500 ಕೋಟಿ ಬಹುಕೋಟಿ ಠೇವಣಿ ವಂಚನೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದ್ದು, ಸಾರ್ವಜನಿಕರ ಠೇವಣಿ ಹಣದಿಂದ ಐಷಾರಾಮಿ ಕಾರು ಉಡುಗೊರೆಯಾಗಿ ನೀಡಲಾಗಿದೆಯೇ ಎಂಬ ಅನುಮಾನ ಮೂಡಿದೆ. ಇದನ್ನು ಸಿಐಡಿ ಗಂಭೀರವಾಗಿ ಪರಿಗಣಿಸಿದೆ.&lt;/p&gt;&lt;img&gt;&lt;p&gt;ಕಳೆದ ಡಿ.27ರಂದು ಬೆಳಗಾವಿಯ ಸರದಾರ್ಸ್ ಕಾಲೇಜು ಮೈದಾನದಲ್ಲಿ ನಡೆದ ಬೆಳಗಾವಿ ಉತ್ಸವ ಕಾರ್ಯಕ್ರಮವನ್ನು ಶಿವಂ ಅಸೋಸಿಯೇಟ್ಸ್ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ದ ಜಿಲ್ಲಾಧ್ಯಕ್ಷ ಆರ್.ಅಭಿಲಾಷ್&zwnj;ಗೆ ಸುಮಾರು ₹1.5 ಕೋಟಿ ಮೌಲ್ಯದ ಐಷಾರಾಮಿ ಕಾರು ಉಡುಗೊರೆಯಾಗಿ ನೀಡಲಾಗಿದೆ ಎನ್ನಲಾಗಿದೆ. ಈ ಕಾರು ಸಾರ್ವಜನಿಕರ ಠೇವಣಿ ಹಣದಿಂದ ಖರೀದಿಸಿ ನೀಡಲಾಗಿದೆಯೇ ಎಂಬ ಶಂಕೆ ಹಿನ್ನೆಲೆಯಲ್ಲಿ ಕಾರಿನ ಮೂಲ, ಹಣದ ಹರಿವು ಹಾಗೂ ಉಡುಗೊರೆ ವ್ಯವಹಾರದ ಕುರಿತು ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.&lt;/p&gt;&lt;img&gt;&lt;p&gt;ಸಿಐಡಿ ಅಧಿಕಾರಿಗಳು ಕಾರ್&zwnj;ನ ತನಿಖೆಗೆ ಅಗತ್ಯವಾಗಬಹುದು. ಆದ್ದರಿಂದ ಅದನ್ನು ತನಿಖಾ ಸಂಸ್ಥೆಗೆ ಹಸ್ತಾಂತರಿಸಬೇಕೆಂದು ಆರ್.ಅಭಿಲಾಷ್&zwnj;ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಐಷಾರಾಮಿ ಕಾರ್&zwnj; ಸ್ವೀಕರಿಸಿದ ಸಂದರ್ಭದ ಫೋಟೋ ಹಾಗೂ ವಿಡಿಯೋಗಳನ್ನು ಅಭಿಲಾಷ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಆ ಪೋಸ್ಟ್&zwnj;ಗಳನ್ನು ಅಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಆಯೋಜಿಸಿದ್ದ ಸ್ವಚ್ಛ ಬೆಳಗಾವಿ ಸಂಭ್ರಮ ಕಾರ್ಯಕ್ರಮದಲ್ಲಿಯೂ ಆಯೋಜಕರಿಗೆ ಕಾರು ಉಡುಗೊರೆ ನೀಡುವುದಾಗಿ ಶಿವಾನಂದ ನೀಲಣ್ಣವರ ಭರವಸೆ ನೀಡಿದ್ದರು. ಆ ಭರವಸೆ ಪ್ರಕಾರ ಕಾರು ನೀಡಲಾಗಿದೆಯೇ? ಅಥವಾ ಕೇವಲ ಘೋಷಣೆಯಷ್ಟೇ ಆಗಿತ್ತೇ? ಎಂಬುದರ ತನಿಖೆ ವೇಳೆ ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.&lt;/p&gt;&lt;img&gt;&lt;p&gt;ಸಿಐಡಿ ಅಧಿಕಾರಿಗಳು ಈಗ ಶಿವಂ ಅಸೋಸಿಯೇಟ್ಸ್ ಮೂಲಕ ಸಂಗ್ರಹಿಸಲಾದ ಹಣ ಎಲ್ಲೆಲ್ಲಿ ಬಳಸಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಣ ಬಳಸಲಾಗಿದೆಯೇ? ಉಡುಗೊರೆಗಳ ರೂಪದಲ್ಲಿ ಪ್ರಭಾವಿ ವ್ಯಕ್ತಿಗಳಿಗೆ ವಿತರಿಸಲಾಗಿದೆಯೇ? ಎಂಬ ಅಂಶಗಳನ್ನೂ ತನಿಖೆ ವ್ಯಾಪ್ತಿಗೆ ತೆಗೆದುಕೊಳ್ಳಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ವಹಿವಾಟಿನ ಶಂಕೆ ವ್ಯಕ್ತವಾಗಿದ್ದು, 35 ಸಾವಿರಕ್ಕೂ ಹೆಚ್ಚು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡಿರುವ ಶಿವಾನಂದ ನೀಲಣ್ಣವರ ಸದ್ಯ ಸಿಐಡಿ ಕಸ್ಟಡಿಯಲ್ಲಿದ್ದು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.&lt;/p&gt;&lt;img&gt;&lt;p&gt;ಶಿವಾನಂದ ನೀಲಣ್ಣನವರ್ ವಿರುದ್ಧ ಬೆಳಗಾವಿ ಪೊಲೀಸರು ಅಲರ್ಟ್ ಆಗಿ ಈತನ ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಂತೆ ಎಚ್ಚೆತ್ತ ಕಡೂರು ಪೊಲೀಸರು ಠಾಣೆಗೆ ನೀಡಿದ್ದ ನಾಮಫಲಕದಲ್ಲಿದ್ದ ಶಿವಾನಂದ ನೀಲಣ್ಣವರ್ ಹೆಸರನ್ನು ಅಳಿಸಿ ಪೊಲೀಸ್ ಇಲಾಖೆ ಸಹಾಯವಾಣಿ ತುರ್ತು ಸಂಖ್ಯೆಗಳನ್ನು ನಮೂದಿಸಿದೆ. 2 ತಿಂಗಳ ಹಿಂದಷ್ಟೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಯುವ ಜಾಗೃತಿ ಹೆಸರಲ್ಲಿ ದೊಡ್ಡ ಕಾರ್ಯಕ್ರಮವನ್ನು ಶಿವಾನಂದ ನೀಲಣ್ಣವರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಪಟ್ಟಣದ ಪ್ರಮುಖ ರಸ್ತೆಗಳ ವೃತ್ತಗಳಲ್ಲಿ ಶಿವಾನಂದ ನೀಲಣ್ಣವರ್ ಫ್ಲೆಕ್ಸ್ ಗಳು ರಾರಾಜಿಸುತ್ತಿತ್ತು.&lt;/p&gt;&lt;img&gt;&lt;p&gt;ಅಂದಿನ ವೇದಿಕೆ ಕಾರ್ಯಕ್ರಮದಲ್ಲಿ ಮನಸ್ಸು ಮಾಡಿದರೆ 224 ಕ್ಷೇತ್ರಗಳಿಗೆ ಚುನಾವಣೆಗೆ ಅಭ್ಯರ್ಥಿಗಳನ್ನು ಹಾಕಿಸಿ ನಾನು ರಾಜ್ಯದ ಸಿ.ಎಂ. ಆಗಬಲ್ಲೆ ಎಂಬ ಶಿವಾನಂದ ನೀಲಣ್ಣವರ್ ಮಾತುಗಳು ಸಾಕಷ್ಟು ವೈರಲ್ ಆಗಿತ್ತು.ಕೆಲ ದಿನಗಳ ಹಿಂದೆ ಕಡೂರುಠಾಣೆಗೆ ಬೋರ್ಡ್ ನೀಡಿ ಕೊಡುಗೆ ಶಿವಾನಂದ ನೀಲಣ್ಣವರ್, ಸಮಾಜ ಸೇವಕ ಎಂದು ಬರೆಸಲಾಗಿತ್ತು. ವಂಚನೆ ಪ್ರಕರಣದ ಹಿನ್ನಲೆಯಲ್ಲಿ ಎಚ್ಚೆತ್ತ ಪೊಲೀಸರು ಆತನ ಹೆಸರಿನ ಜಾಗಕ್ಕೆ ರೇಡಿಯಂ ಸ್ಟಿಕರ್ ನಿಂದ ಮುಚ್ಚಿ, ತುರ್ತು ಕರೆ 112 ಮತ್ತು ಮಕ್ಕಳ ಸಹಾಯವಾಣಿ 1098 ನಂಬರ್ ಬರೆಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/shivam-associates-scam-shivanand-neelannavar-luxury-car-gift-to-karnataka-rakshana-vedike-leder-under-cid-scanner-gdp-gzbo2ug"/>
        </item>
        <item>
            <title><![CDATA[Belagavi: ಶಿವಾನಂದ ನೀಲಣ್ಣವರ ₹4500 ಕೋಟಿ ಹಗರಣ ಕೇಸ್; ತನಿಖೆ ಕೈಗೆತ್ತಿಕೊಂಡ ಸಿಐಡಿ]]></title>
            <link>https://kannada.asianetnews.com/karnataka-districts/belagavi-shivanand-neelannavar-shivam-associates-rs-4500-crore-scam-case-cid-takes-up-investigation-mrq/articleshow-lqo3dla</link>
            <guid isPermaLink="true">https://kannada.asianetnews.com/karnataka-districts/belagavi-shivanand-neelannavar-shivam-associates-rs-4500-crore-scam-case-cid-takes-up-investigation-mrq/articleshow-lqo3dla</guid>
            <pubDate>Mon, 18 May 2026 05:54:16 +0530</pubDate>
            <description><![CDATA[ಶಿವಂ ಅಸೋಸಿಯೇಟ್ಸ್ ಹೆಸರಿನಲ್ಲಿ ಹೂಡಿಕೆ ಸಂಸ್ಥೆ ತೆರೆದು, ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಸಾವಿರಾರು ಜನರಿಗೆ ಅಂದಾಜು ₹4500 ಕೋಟಿ ವಂಚಿಸಿದ ಆರೋಪದ ಮೇಲೆ ಶಿವಾನಂದ ನೀಲಣ್ಣನವರನನ್ನು ಬಂಧಿಸಲಾಗಿದೆ. ಪ್ರಕರಣದ ವ್ಯಾಪ್ತಿ ದೊಡ್ಡದಾಗಿದ್ದರಿಂದ, ಇದೀಗ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krnmvt24419rxr1exp3va6jd,imgname-shivam-associates-shivanand-neelannavar--6--1778842986563.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಠೇವಣಿದಾರರಿಗೆ ಅಂದಾಜು ₹4,500 ಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಶಿವಾನಂದ ನೀಲಣ್ಣವರ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಹಗರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ.&lt;/p&gt;&lt;h2&gt;&lt;strong&gt;ಐದು ದಿನ ಪೊಲೀಸ್ ಕಸ್ಟಡಿಗೆ&lt;/strong&gt;&lt;/h2&gt;&lt;p&gt;ಭಾನುವಾರ ನಗರಕ್ಕೆ ಆಗಮಿಸಿದ ಸಿಐಡಿ ಡಿಐಜಿ ಭೀಮಾಶಂಕರ ಗುಳೇದ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಎರಡು ಗಂಟೆ ಸಭೆ ನಡೆಸಿದರು. ಬಳಿಕ, ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರಿಂದ ಪ್ರಕರಣದ ತನಿಖಾ ವರದಿಯ ಕಡತಗಳನ್ನು ಪಡೆದುಕೊಂಡರು. ಈ ಮಧ್ಯೆ, ಪ್ರಕರಣದ ಆರೋಪಿ, ನೀಲಣ್ಣವರನನ್ನು ಶನಿವಾರ ರಾತ್ರಿ ನ್ಯಾಯಧೀಶರ ಎದುರು ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಸಿಐಡಿ ತನಿಖಾ ತಂಡ ನೀಲಣ್ಣವರನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದೆ.&lt;/p&gt;&lt;p&gt;ದಾಖಲೆ ಹಸ್ತಾಂತರ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪೊಲೀಸ್&zwnj; ಆಯುಕ್ತ ಭೂಷಣ ಬೋರಸೆ, ಈ ವಂಚನೆ ಪ್ರಕರಣ ಇತರ ರಾಜ್ಯಗಳಿಗೂ ವ್ಯಾಪಿಸಿರುವ ಶಂಕೆ ಇದೆ. ₹4,500 ಕೋಟಿಗೂ ಹೆಚ್ಚು ಅವ್ಯವಹಾರ ಆಗಿರುವುದರಿಂದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ನಾವು ಈವರೆಗೆ ನಡೆಸಿದ ತನಿಖೆಯ ವರದಿಯನ್ನು ಅವರಿಗೆ ನೀಡಿದ್ದೇವೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಹಗರಣವೇನು?:&lt;/strong&gt;&lt;/p&gt;&lt;p&gt;ಮಾಜಿ ಸೈನಿಕರು ಸೇರಿ ಅಂದಾಜು 4,500ಕ್ಕೂ ಅಧಿಕ ಮಂದಿ ನೀಲಣ್ಣವರ ಮಾಲಿಕತ್ವದ ಶಿವಂ ಅಸೋಸಿಯೇಟ್ಸ್&zwnj;ನಲ್ಲಿ ಅಂದಾಜು 4,500 ಕೋಟಿ ರೂ.ಗೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದಾರೆ. ಇಲ್ಲಿ ಆರ್&zwnj;ಬಿಐನ ಯಾವುದೇ ನಿಯಮಗಳು ಪಾಲನೆಯಾಗಿಲ್ಲ, ಬದಲಿಗೆ ಠೇವಣಿಗೆ ಹೆಚ್ಚಿನ ಬಡ್ಡಿ ಕೊಡುವ ಬಗ್ಗೆ ಆಮಿಷವೊಡ್ಡಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ. ಜನರ ಹಣಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆಯಡಿ ತನಿಖೆಗೆ ಡಿಸಿ ಮೊಹಮ್ಮದ್ ರೋಷನ್ ಆದೇಶ ಮಾಡಿದ್ದರು. ಇದರ ಬೆನ್ನಲ್ಲೇ ನೀಲಣ್ಣವರನ ಮನೆ, ಶಿವಂ ಅಸೋಸಿಯೇಟ್ಸ್&zwnj; ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಎಫ್&zwnj;ಐಆರ್ ದಾಖಲಾಗಿದ್ದು, ಶುಕ್ರವಾರ ರಾತ್ರಿ ಆತನನ್ನು ಬಂಧಿಸಲಾಗಿತ್ತು. ಬಳಿಕ, ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೇ ಈಗ ಸಿಐಡಿ ತನಿಖೆ ಆರಂಭವಾಗಿದೆ.&lt;/p&gt;&lt;p&gt;₹4500 ಕೋಟಿ ಕೇಸ್&zwnj;ನಲ್ಲಿ ರಾಜಕೀಯವಿಲ್ಲ: ಸತೀಶ&lt;/p&gt;&lt;p&gt;ಶಿವಂ ಅಸೋಸಿಯೇಟ್ಸ್ ಮೇಲೆ ದಾಳಿ ಮತ್ತು ಬಂಧನದಲ್ಲಿ ಯಾವುದೇ ರಾಜಕೀಯ ಉದ್ದೇಶ, ಪ್ರಭಾವವಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ₹4500 ಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ಪ್ರಕರಣವನ್ನು ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ. ಸಿಐಡಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ವರದಿ ನೀಡಿದ ನಂತರವೇ ಈ ಹಗರಣದ ಸಂಪೂರ್ಣ ಸತ್ಯಾಸತ್ಯತೆ ಮತ್ತು ನಿಖರ ಮಾಹಿತಿ ಹೊರಬರಲಿದೆ. ಈ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಸಾರ್ವಜನಿಕರ ಹಣಕಾಸು ವಂಚನೆಗೆ ಸಂಬಂಧಿಸಿದ ವಿಷಯವಾಗಿದೆ. ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಅಥವಾ ಪ್ರೇರೆಪಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-shivanand-neelannavar-shivam-associates-rs-4500-crore-scam-case-cid-takes-up-investigation-mrq/articleshow-lqo3dla"/>
        </item>
        <item>
            <title><![CDATA[ಸಂಜೆ 5.30ಕ್ಕೆ ಬೆಳಗಾವಿ ವಿಟಿಯು ಪರೀಕ್ಷೆ ಅಂತ್ಯ, ಸಂಜೆ 5.40ಕ್ಕೆ ರಿಸಲ್ಟ್‌ ;  ಹತ್ತೇ ನಿಮಿಷಕ್ಕೆ ಫಲಿತಾಂಶ]]></title>
            <link>https://kannada.asianetnews.com/education/results-ten-minutes-after-the-exam-ends-belagavi-vtu-exam-ends-at-5-30-pm-results-at-5-40-pm-mrq/articleshow-m28derw</link>
            <guid isPermaLink="true">https://kannada.asianetnews.com/education/results-ten-minutes-after-the-exam-ends-belagavi-vtu-exam-ends-at-5-30-pm-results-at-5-40-pm-mrq/articleshow-m28derw</guid>
            <pubDate>Sat, 23 May 2026 05:00:38 +0530</pubDate>
            <description><![CDATA[&lt;p&gt;ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಅಂತಿಮ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ಡಿಜಿಟಲ್ ಮೌಲ್ಯಮಾಪನ ಪದ್ಧತಿಯಿಂದಾಗಿ ಈ ತ್ವರಿತ ಪ್ರಕ್ರಿಯೆ ಸಾಧ್ಯವಾಗಿದ್ದು, 56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hz4yxqn71cy9d6jdrm3kapqp,imgname-vdvd.png" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ವು ಅಂತಿಮ ಸೆಮಿಸ್ಟರ್&zwnj;ನ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 10 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಇಷ್ಟು ತ್ವರಿತವಾಗಿ ವಿವಿಯೊಂದು ಫಲಿತಾಂಶ ಪ್ರಕಟಿಸಿರುವುದು ದೇಶದಲ್ಲಿ ಇದೇ ಮೊದಲು.&lt;/p&gt;&lt;p&gt;ಬಿ.ಇ. ಮತ್ತು ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ 56,192 ವಿದ್ಯಾರ್ಥಿಗಳು ಹಾಜರಾಗಿದ್ದರು. ಶುಕ್ರವಾರ ಸಂಜೆ 5.30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5.40ಕ್ಕೆ ಫಲಿತಾಂಶ ಬಿಡುಗಡೆ ಮಾಡಿದೆ. ಶೇ.99.98 ಫಲಿತಾಂಶ ಸಾಧಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಜಂಟಿಯಾಗಿ ಬಿಡುಗಡೆ ಮಾಡಿದರು.&lt;/p&gt;&lt;p&gt;ಹಿಂದಿನ ವರ್ಷಗಳಿಗೆ ಹೋಲಿಸಿದರೆ, ಸಂಪೂರ್ಣ ಮೌಲ್ಯಮಾಪನ ಪ್ರಕ್ರಿಯೆಯನ್ನು ಎಂಟು ದಿನಗಳ ಮುಂಚಿತವಾಗಿಯೇ ಮುಗಿಸಿದೆ. ಆ ಮೂಲಕ ಈ ಹಿಂದಿನ ದಾಖಲೆಗಳನ್ನು ಮುರಿದಿದೆ. ಈ ಹಿಂದೆ ಪರೀಕ್ಷೆ ಮುಗಿದ ಒಂದು ಗಂಟೆಯೊಳಗೆ ಫಲಿತಾಂಶ ಪ್ರಕಟಿಸಿತ್ತು. ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ನೇರವಾಗಿ ಕಳುಹಿಸಲಾಗಿದೆ.&lt;/p&gt;&lt;p&gt;ಈ ಕುರಿತು ಮಾತನಾಡಿದ ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ತಂತ್ರಜ್ಞಾನ ಅಳವಡಿಕೆಯಲ್ಲಿ ವಿಟಿಯು ಸದಾ ಮುಂದಿದೆ. ವಿದ್ಯಾರ್ಥಿಗಳ ಸ್ನೇಹಿಯಾಗಿದೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಪರೀಕ್ಷೆ ಮುಗಿದ ಕೇವಲ 10 ನಿಮಿಷದಲ್ಲಿ ಫಲಿತಾಂಶ ನೀಡುವುದು ಸುಲಭದ ವಿಷಯವಲ್ಲ. ಇದಕ್ಕೆ ಸಹಕಾರ ನೀಡಿದ ವಿಟಿಯು ಆಡಳಿತ ಸಿಬ್ಬಂದಿ, ಪರೀಕ್ಷಾ ವಿಭಾಗದ ಸಿಬ್ಬಂದಿ ಮತ್ತು ಸಂಯೋಜಿತ ಕಾಲೇಜುಗಳ ಸಿಬ್ಬಂದಿಗೆ ಅಭಿನಂದನೆ ತಿಳಿಸುತ್ತೇನೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಉದ್ಯೋಗ ಮತ್ತು ಉನ್ನತ ಶಿಕ್ಷಣ ಪಡೆಯಲು ಫಲಿತಾಂಶದ ನಿರೀಕ್ಷೆಯಲ್ಲಿರುತ್ತಾರೆ. ಹೀಗಾಗಿ ನಾವು ಶೀಘ್ರ ಫಲಿತಾಂಶ ನೀಡಿದ್ದೇವೆ ಎಂದರು.&lt;/p&gt;&lt;h2&gt;&lt;strong&gt;ಫಲಿತಾಂಶದ ಇತಿಹಾಸ:&lt;/strong&gt;&lt;/h2&gt;&lt;p&gt;2025ರ ಮೇನಲ್ಲಿ ನಡೆದ 2021ರ ಬ್ಯಾಚ್&zwnj;ನ 50,321 ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಒಂದು ಗಂಟೆಯೊಳಗೆ ವಿವಿ ಪ್ರಕಟಿಸಿತ್ತು. 2024ರ ಮೇನಲ್ಲಿ ನಡೆದ 2020ರ ಬ್ಯಾಚ್&zwnj;ನ 37,011 ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ 3 ಗಂಟೆಯಲ್ಲಿ ಪ್ರಕಟಿಸಿತ್ತು. 2023ರಲ್ಲಿ ನಡೆದ 2019ರ ಬ್ಯಾಚ್&zwnj;ನ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಎರಡನೇ ದಿನ ನೀಡಿತ್ತು. ಆ ವೇಳೆ 43,662 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.&lt;/p&gt;&lt;p&gt;ವಿದ್ಯಾರ್ಥಿಗಳು https://results.vtu.ac.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪಡೆದುಕೊಳ್ಳಬಹುದು.&lt;/p&gt;&lt;h3&gt;&lt;strong&gt;10 ನಿಮಿಷದಲ್ಲಿ ಸಾಧ್ಯವಾಗಿದ್ದೇಗೆ?&lt;/strong&gt;&lt;/h3&gt;&lt;p&gt;ವಿಟಿಯು ವ್ಯಾಪ್ತಿಯಲ್ಲಿರುವ 220 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳ ಥಿಯರಿ ಪರೀಕ್ಷೆಯನ್ನು ಮೇ ಮೊದಲ ವಾರದಿಂದ ಮೇ 19ರವರೆಗೆ ನಡೆಸಲಾಗಿತ್ತು. ಡಿಜಿಟಲ್&zwnj; ಮೌಲ್ಯಮಾಪನ ವ್ಯವಸ್ಥೆಯ ಮೂಲಕ ಆಯಾ ದಿನದಂದೇ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನವನ್ನು ನಡೆಸಿ ಅಂಕಗಳನ್ನು ಡಿಜಿಟಲ್&zwnj; ರೂಪದಲ್ಲಿ ಸಂಗ್ರಹಿಸಿಡಲಾಗಿತ್ತು. ಶುಕ್ರವಾರ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು. ಮಧ್ಯಾಹ್ನ 2.30 ರಿಂದ ಸಂಜೆ 5.30ರವರೆಗೆ ನಡೆಯಿತು. ಪರೀಕ್ಷೆ ಮುಗಿದ 5 ನಿಮಿಷದಲ್ಲಿ ಅಂಕಗಳನ್ನು ಕ್ರೋಢೀಕರಿಸಿ 10 ನಿಮಿಷದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.&lt;/p&gt;&lt;p&gt;--&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/results-ten-minutes-after-the-exam-ends-belagavi-vtu-exam-ends-at-5-30-pm-results-at-5-40-pm-mrq/articleshow-m28derw"/>
        </item>
        <item>
            <title><![CDATA[ಸತೀಶ್ ಜಾರಕಿಹೊಳಿ ಕುರಿತ ಸುಳ್ಳು ಪೋಸ್ಟ್ ಮಾಡಿದ 'ಕರುನಾಡ ಕುರುಬ ಗೌಡ್ರು' ಫೇಸ್‌ಬುಕ್ ಪೇಜ್ ಮೇಲೆ FIR!]]></title>
            <link>https://kannada.asianetnews.com/politics/satish-jarkiholi-defamation-case-police-case-against-fake-fb-page-in-belagavi-sat/articleshow-nql1neq</link>
            <guid isPermaLink="true">https://kannada.asianetnews.com/politics/satish-jarkiholi-defamation-case-police-case-against-fake-fb-page-in-belagavi-sat/articleshow-nql1neq</guid>
            <pubDate>Sun, 31 May 2026 18:17:45 +0530</pubDate>
            <description><![CDATA[&lt;p&gt;ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ಹಂಚಿಕೊಳ್ಳಲಾಗಿತ್ತು. ಈ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kec3khyg1mjhr8s681z39rvq,imgname-----------------------2026-01-07t165541.766-1767785482192.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮೇ 31): ರಾ&lt;/strong&gt;ಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಸತೀಶ್ ಜಾರಕಿಹೊಳಿ ಅವರ ಹೆಸರಿಗೆ ಮಸಿ ಬಳಿಯುವ ಹಾಗೂ ಸಾರ್ವಜನಿಕವಾಗಿ ದ್ವೇಷ ಹುಟ್ಟುಹಾಕುವ ಉದ್ದೇಶದಿಂದ ನಕಲಿ ಪೋಸ್ಟ್ ಹಂಚಿಕೊಂಡವರ ವಿರುದ್ಧ ಈಗ ಬೆಳಗಾವಿ ಜಿಲ್ಲಾ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h3&gt;&lt;strong&gt;ಏನಿದು ವಿವಾದಾತ್ಮಕ ಪೋಸ್ಟ್?&lt;/strong&gt;&lt;/h3&gt;&lt;p&gt;'ಕರುನಾಡ ಕುರುಬ ಗೌಡ್ರು' ಎಂಬ ಹೆಸರಿನ ಫೇಸ್&zwnj;ಬುಕ್ ಪುಟದಲ್ಲಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಗಂಭೀರವಾದ ಮತ್ತು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಲಾಗಿತ್ತು. 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಅವರ ಆಪ್ತ ಸತೀಶ್ ಜಾರಕಿಹೊಳಿ ಅವರೇ ಚೂರಿ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಈಗಾಗಲೇ 37 ಜನ ಶಾಸಕರ ಸಹಿ ಸಂಗ್ರಹಿಸಿದ್ದಾರೆ' ಎಂಬ ಒಕ್ಕಣೆಯೊಂದಿಗೆ ಪೋಸ್ಟ್ ಮಾಡಲಾಗಿತ್ತು. ಇದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.&lt;/p&gt;&lt;h2&gt;&lt;strong&gt;ಪೊಲೀಸ್ ದೂರು ದಾಖಲು:&lt;/strong&gt;&lt;/h2&gt;&lt;p&gt;ಸತೀಶ್ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಅವರ ಆಪ್ತರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರಾದ ರಾಜಶೇಖರ ತಳವಾರ ಅವರು ಬೆಳಗಾವಿ ಸಿಇಎನ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪೋಸ್ಟ್ ಕೇವಲ ಸುಳ್ಳು ಮಾಹಿತಿಯಷ್ಟೇ ಅಲ್ಲದೆ, ಎರಡು ಸಮುದಾಯಗಳ ನಡುವೆ ವಿಷಬೀಜ ಬಿತ್ತುವ ಹಾಗೂ ಸಾರ್ವಜನಿಕವಾಗಿ ದೊಂಬಿ ಎಬ್ಬಿಸುವ ಹುನ್ನಾರವನ್ನು ಹೊಂದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.&lt;/p&gt;&lt;h3&gt;&lt;strong&gt;ತನಿಖೆ ಆರಂಭಿಸಿದ ಪೊಲೀಸರು:&lt;/strong&gt;&lt;/h3&gt;&lt;p&gt;ದೂರನ್ನು ಸ್ವೀಕರಿಸಿರುವ ಬೆಳಗಾವಿ ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ನಕಲಿ ಫೇಸ್&zwnj;ಬುಕ್ ಖಾತೆಯ ಹಿಂದಿರುವ ವ್ಯಕ್ತಿಗಳು ಯಾರು? ಇದರ ಹಿಂದಿರುವ ಉದ್ದೇಶವೇನು? ಎಂಬ ಬಗ್ಗೆ ತಾಂತ್ರಿಕ ತನಿಖೆ ಆರಂಭಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಅಥವಾ ವೈಯಕ್ತಿಕ ದ್ವೇಷಕ್ಕಾಗಿ ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.&lt;/p&gt;&lt;p&gt;ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಅಪರಾಧವಾಗಿದ್ದು, ಸಾರ್ವಜನಿಕರು ಇಂತಹ ದಾರಿ ತಪ್ಪಿಸುವ ಮಾಹಿತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/satish-jarkiholi-defamation-case-police-case-against-fake-fb-page-in-belagavi-sat/articleshow-nql1neq"/>
        </item>
        <item>
            <title><![CDATA[ನೀಲವಣ್ಣವರ ಕೇಸ್ ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಹೂಡಿಕೆ ಜಾಲ ಪತ್ತೆ: ಈ ಕಂಪನಿಲಿ 15 ತಿಂಗಳಿಗೆ ಹಣ ಡಬಲ್‌!]]></title>
            <link>https://kannada.asianetnews.com/karnataka-districts/belagavi-next-big-scam-adityaraj-capital-lures-investors-60-percent-annual-returns-after-shivam-associates-fraud-gdp/articleshow-qg0ve9t</link>
            <guid isPermaLink="true">https://kannada.asianetnews.com/karnataka-districts/belagavi-next-big-scam-adityaraj-capital-lures-investors-60-percent-annual-returns-after-shivam-associates-fraud-gdp/articleshow-qg0ve9t</guid>
            <pubDate>Thu, 21 May 2026 18:22:01 +0530</pubDate>
            <description><![CDATA[ಶಿವಂ ಇನ್ವೆಸ್ಟ್ಮೆಂಟ್ ಪ್ರಕರಣದ ಬೆನ್ನಲ್ಲೇ, ಬೆಳಗಾವಿ ಮೂಲದ ಆದಿತ್ಯರಾಜ್ ಕ್ಯಾಪಿಟಲ್ ಎಂಬ ಮತ್ತೊಂದು ಕಂಪನಿ ಬೆಳಕಿಗೆ ಬಂದಿದೆ. ಈ ಕಂಪನಿಯು ವರ್ಷಕ್ಕೆ ಶೇ. 60ರಷ್ಟು ಬಡ್ಡಿ ಹಾಗೂ 15 ತಿಂಗಳಲ್ಲಿ ಹಣ ಡಬಲ್ ಮಾಡುವ ಆಮಿಷವೊಡ್ಡಿ ನೂರಾರು ಕೋಟಿ ಸಂಗ್ರಹಿಸಿದೆ. ಕಾನೂನುಬದ್ಧ ಒಪ್ಪಂದಗಳ ಮೂಲಕ ಹೂಡಿಕೆದಾರರನ್ನು ಆಕರ್ಷಿಸುತ್ತಿರುವುದು ಮತ್ತೊಂದು ದೊಡ್ಡ ವಂಚನೆಯ ಅನುಮಾನಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks58x18m59jqnvtwdz6701fe,imgname-adityaraj-capital-belagav-1779367314707.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಬೆಳಗಾವಿ ಮೂಲದ ಶಿವಾನಂದ ನೀಲಣ್ಣವರ ನೇತೃತ್ವದ ಶಿವಂ ಇನ್ವೆಸ್ಟಮೆಂಟ್ ಪ್ರೈ.ಲಿ. ಹೆಚ್ಚಿನ ಬಡ್ಡಿ ಕೊಡುವ ಭರವಸೆ ನೀಡಿ ಸಾವಿರಾರು ಕೋಟಿ ಹಣ ನಂಗ್ರಹ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಮಧ್ಯೆಯೇ ಇಂತಹುದೇ ಮತ್ತೊಂದು ಹೂಡಿಕೆ ಕಂಪನಿ ಗ್ರಾಹಕರಿಗೆ ಹೆಚ್ಚಿನ ಬಡ್ಡಿಯ ಭರವಸೆ ನೀಡಿ ನೂರಾರು ಕೋಟಿ ಹಣ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.&lt;/p&gt;&lt;p&gt;ಹೌದು, ಶಿವಂ ಇನ್ವೆಸ್ಟಮೆಂಟ್&zwnj; ಪ್ರೈ.ಲಿ. ವರ್ಷಕ್ಕೆ ಪ್ರತಿಶತ 36 ಬಡ್ಡಿ ಕೊಡುವುದಾಗಿ ಹೇಳಿ ಜನರಿಂದ ಅಕ್ರಮವಾಗಿ ಸಾವಿರಾರು ಕೋಟಿ ಹಣ ಸಂಗ್ರಹಿಸಿದ ಆರೋಪದಲ್ಲಿ ಅದರ ಸಂಸ್ಥಾಪಕ ಶಿವಾನಂದ ನೀಲಣ್ಣವರ ಅವರನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸಿಐಡಿ ಕಂಪನಿಯ ಆಳ ಅಗಲ ಜಾಲಾಡುತ್ತಿದೆ.&lt;/p&gt;&lt;p&gt;ಈ ಮಧ್ಯೆ ಶಿವಂ ಕಂಪನಿ ವರ್ಷಕ್ಕೆ ಪ್ರತಿಶತ 36 ಬಡ್ಡಿ ಹಣ ನೀಡುವುದಾಗಿ ಹೇಳಿದ್ದರೆ ಬೆಳಗಾವಿ ಮೂಲದ ಮತ್ತೊಂದು ಕಂಪನಿ ಆದಿತ್ಯರಾಜ್&zwnj; ಕ್ಯಾಪಿಟಲ್&zwnj; ತಿಂಗಳಿಗೆ ಪ್ರತಿಶತ 5 ಅಂದ್ರೆ ವರ್ಷಕ್ಕೆ ಪ್ರತಿಶತ 60 ಪರ್ಸೆಂಟ್&zwnj; ರಿಟರ್ನ್&zwnj; ಕೊಡುವುದಾಗಿ ಹೇಳಿ ಜನರಿಂದ ನೂರಾರು ಕೋಟಿ ಹಣ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.&lt;/p&gt;&lt;p&gt;ಈ ಕಂಪನಿಯಲ್ಲಿ ಹಣ ತೊಡಗಿಸಿದರೆ ಕೇವಲ 15 ತಿಂಗಳಲ್ಲಿ ಈ ಹಣ ಡಬಲ್&zwnj; ಆಗಲಿದೆಯಂತೆ. ಇಲ್ಲಿ ಎರಡು ಆಯ್ಕೆಗಳಿವೆ. ಒಂದು ಹೂಡಿಕೆ ಮಾಡಿ 15 ತಿಂಗಳಿಗೆ ಡಬಲ್&zwnj; ಹಣ ಪಡೆಯುವುದು, ಇನ್ನೊಂದು ಹೂಡಿಕೆ ಮಾಡಿ ಅದಕ್ಕೆ ಪ್ರತಿ ತಿಂಗಳು ಪ್ರತಿಶತ 5ರಂತೆ ಬಡ್ಡಿ ಹಣ ಪಡೆಯುವುದು. 20ನೇ ತಿಂಗಳಿಗೆ ನೀವು ಹೂಡಿಕೆ ಮಾಡಿದ ಹಣವೂ ನಿಮ್ಮ ಖಾತೆಗೆ ಮರಳಲಿದೆ. ಈ ಯೋಜನೆಯಲ್ಲಿ 20 ತಿಂಗಳಿಗೆ ನಿಮ್ಮ ಹಣ ಡಬಲ್&zwnj; ಆಗಲಿದೆ.&lt;/p&gt;&lt;p&gt;ಈ ಕಂಪನಿ ಕಳೆದ ಮೂರುವರೆ ವರ್ಷಗಳಿಂದ ಬೆಳಗಾವಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಭಾಗ್ಯನಗರ 5ನೇ ಕ್ರಾಸ್&zwnj;ನಲ್ಲಿ ಕಚೇರಿ ಹೊಂದಿದ್ದು, ವರ್ಷದಲ್ಲಿ ಎರಡ್ಮೂರು ಬಾರಿ ಸ್ಟಾರ್ ಹೋಟೆಲ್&zwnj;ಗಳಲ್ಲಿ ಹೂಡಿಕೆದಾರ ತರಬೇತಿ ಹೆಸರಿನಲ್ಲಿ ಸಭೆ ನಡೆಸಿ ಹೆಚ್ಚಿನ ಹೂಡಿಕೆ ಮಾಡಿದವರಿಗೆ, ಈಗಿರುವ ಪ್ಲಾನ್ ಮೆಚ್ಯೂರಿಟಿ ಆಗಿ ಮರಳಿ ಆ ಹಣವನ್ನು ಹೂಡಿಕೆ ಮಾಡುವವರಿಗೆ ಆಕರ್ಷಕ ಗಿಫ್ಟ್ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಇಲ್ಲಿಯವರೆಗೆ ಡಬಲ್ ಆದ ಹಣವನ್ನು ಅಲ್ಲಿಯೇ ಮರಳಿ ತೊಡಗಿಸಲು ಪ್ರೇರೇಪಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.&lt;/p&gt;&lt;p&gt;ಶಿವಂ ಅಸೋಸಿಯೇಟ್ಸ್&zwnj; ಪ್ರಕರಣ ಸಂಚಲನ ಸೃಷ್ಟಿಸಿರುವ ಮಧ್ಯೆಯೇ ಕಳೆದ ಭಾನುವಾರ ಬೆಳಗಾವಿಯ ಕೋಟೆಕೆರೆ ಬಳಿಯ ಖಾಸಗಿ ಹೋಟೆಲ್&zwnj;ನಲ್ಲಿ ಕಂಪನಿ ಹೂಡಿಕೆದಾರರ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು. ಸುದ್ದಿ ತಿಳಿದು ಕೆಲವು ಪತ್ರಕರ್ತರು ಹೋಟೆಲ್&zwnj; ಒಳಗೆ ಹೋಗಲು ಯತ್ನಿಸಿದರೂ ಒಳಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ.&lt;/p&gt;&lt;h2&gt;ವ್ಯವಹಾರಕ್ಕೆ ಕಾನೂನು ಮುದ್ರೆ?&lt;/h2&gt;&lt;p&gt;ಹಾಗಂತ ಈ ಕಂಪನಿಯೇನೂ ಕದ್ದುಮುಚ್ಚಿ ವ್ಯವಹಾರ ಮಾಡುತ್ತಿಲ್ಲ. ಬಹಿರಂಗವಾಗಿಯೇ ಪ್ರಚಾರ ಮಾಡುತ್ತ, ಸ್ಟಾರ್ ಹೋಟೆಲ್&zwnj;ಗಳಲ್ಲಿ ಗ್ರಾಹಕರನ್ನು ಸೇರಿಸಿ ಅದ್ಧೂರಿ ಕಾರ್ಯಕ್ರಮ ಮಾಡುತ್ತ ಹೂಡಿಕೆದಾರರನ್ನು ಸೆಳೆಯುತ್ತಿದೆ. ಹೂಡಿಕೆ ಮಾಡುವವರಿಗೆ ₹100 ರೂಪಾಯಿ ಬಾಂಡ್&zwnj; ಪೇಪರ್&zwnj;ದಲ್ಲಿ ಅಗ್ರಿಮೆಂಟ್&zwnj; ಮಾಡಿ ನೋಟರಿ ಸಹ ಮಾಡಿಸಿಕೊಡುತ್ತಿದೆ. ಎಷ್ಟು ಹೂಡಿಕೆ ಮಾಡಲಾಗುತ್ತಿದೆ, ಎಷ್ಟು ಅವಧಿಯರೆಗೆ ಹೂಡಿಕೆಗೆ ಸಿಗುವ ಬಡ್ಡಿ ಹಾಗೂ ಎಷ್ಟು ತಿಂಗಳಿಗೆ ಎಷ್ಟು ಹಣ ಮರಳಿ ಸಿಗಲಿದೆ ಎಂಬುದನ್ನು ಈ ಅಗ್ರಿಮೆಂಟ್&zwnj;ನಲ್ಲಿ ಸ್ಪಷ್ಟವಾಗಿ ನಮೂದಿಸಲಾಗುತ್ತಿದೆ. ₹100 ಬಾಂಡ್&zwnj; ಪೇಪರ್&zwnj;ನಲ್ಲಿ ನೋಟರಿ ಸಹಿತ ಅಗ್ರಿಮೆಂಟ್&zwnj; ಮಾಡಿಕೊಡುತ್ತಿರುವುದರಿಂದ ನಿಮಗೆ ಕಾನೂನಿನ ರಕ್ಷಣೆ ಇದೆ ಎಂದು ನಂಬಿಸಿ ಹೂಡಿಕೆದಾರರನ್ನು ಆಕರ್ಷಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.&lt;/p&gt;&lt;h2&gt;ಸಂಗ್ರಹಿಸಿದ ಹಣ ಎಲ್ಲಿ ಹೂಡಿಕೆ?&lt;/h2&gt;&lt;p&gt;ಜನರಿಂದ ಸಂಗ್ರಹಿಸುವ ಹಣವನ್ನು ಸ್ಟಾಕ್&zwnj; ಮಾರ್ಕೆಟ್&zwnj;ನಲ್ಲಿ ಹೂಡಿಕೆ ಮಾಡಲಾಗುತ್ತದೆ. ಅಗ್ರಿಮೆಂಟ್&zwnj;ನಲ್ಲಿ ಈ ಅಂಶವೂ ಇರುತ್ತದೆ. ಅಗ್ರಿಮೆಂಟ್ ಪ್ರಕಾರ ಹೂಡಿಕೆದಾರನ ಅಕೌಂಟ್&zwnj; ಸ್ಟಾಕ್&zwnj; ಮಾರ್ಕೆಟ್&zwnj;ನಲ್ಲಿ ಹೂಡಿಕೆಯ ಎಲ್ಲ ವ್ಯವಹಾರವನ್ನು ಕಂಪನಿ ನಿರ್ವಹಿಸಲಿದೆ. ಅದು 400 ಟ್ರೇಡಿಂಗ್&zwnj; ದಿನಗಳವರೆಗೆ ಮಾತ್ರ ಊರ್ಜಿತವಾಗಿರಲಿದೆ. ಹೂಡಿಕೆಗೆ ಪ್ರತಿಯಾಗಿ ತಿಂಗಳಿಗೆ ಬಡ್ಡಿ ಶೇ.5 ಹಾಗೂ ಅಸಲು ಶೇ.5 ಸೇರಿ ತಿಂಗಳಿಗೆ 10 ಪರ್ಸೆಂಟ್&zwnj; ಸಿಗಲಿದೆ ಎಂದು ಅಗ್ರಿಮೆಂಟ್&zwnj;ನಲ್ಲಿಯೇ ಸ್ಪಷ್ಟವಾಗಿ ನಮೂದಿಸಲಾಗಿದೆ. 400 ಟ್ರೇಡಿಂಗ್&zwnj; ದಿನಗಳು ಮುಕ್ತಾಯವಾದ ಬಳಿಕ ಹೂಡಿಕೆಯ ಹಣ ಮರಳಿ ಅಕೌಂಟ್&zwnj;ಗೆ ಜಮಾ ಆಗಲಿದೆ ಎಂದು ಅಗ್ರಿಮೆಂಟ್&zwnj;ನಲ್ಲಿ ಹೇಳಲಾಗಿದೆ.&lt;/p&gt;&lt;h2&gt;ಹೇಗೆ ಡಬಲ್&zwnj; ಆಗಲಿದೆ?&lt;/h2&gt;&lt;p&gt;ಹೂಡಿಕೆದಾರ 1 ಲಕ್ಷ ಹೂಡಿಕೆ ಮಾಡಿದರೆ 15 ತಿಂಗಳಿಗೆ ಈ ಹಣ ಬಡಲ್&zwnj; ಅಂದರೆ ₹2 ಲಕ್ಷ ಆಗಲಿದೆ. ಎರಡನೇ ಸ್ಕೀಂನಲ್ಲಿ ಹೂಡಿಕೆದಾರ ₹5 ಲಕ್ಷ ಹಣ ಹೂಡಿದರೆ ತಿಂಗಳಿಗೆ ಶೇ.5ರಷ್ಟು ಬಡ್ಡಿಯ ಲೆಕ್ಕದಲ್ಲಿ ಪ್ರತಿ ತಿಂಗಳು ₹50 ಸಾವಿರದಂತೆ 20 ತಿಂಗಳವರೆಗೆ ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ. 20ನೇ ತಿಂಗಳಿಗೆ ನೀವು ಹೂಡಿಕೆ ಮಾಡಿದ ₹5 ಲಕ್ಷ ಸಿಗಲಿದೆ. ಅಂದರೆ 5+5 20 ತಿಂಗಳಿಗೆ ಡಬಲ್&zwnj; ಅಂದ್ರೆ ₹5 ಲಕ್ಷ ಹೂಡಿಕೆ ಮಾಡಿದವರಿಗೆ ₹10 ಲಕ್ಷ ಸಿಗಲಿದೆ.&lt;/p&gt;&lt;h2&gt;ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿ. ಹಿನ್ನೆಲೆ ಏನು?&lt;/h2&gt;&lt;p&gt;ಈ ಕಂಪನಿಯ ಮಾಲೀಕ ಮಹಾರಾಷ್ಟ್ರದ ಬಾರಾಮತಿ ಮೂಲದವರು. ಈ ಹಿಂದೆ ಮಹಾರಾಷ್ಟ್ರದಲ್ಲಿ ಇಂತಹುದೇ ವ್ಯವಹಾರ ನಡೆಸಿ ದೂರು ದಾಖಲಾದ ಬಳಿಕ ಅಲ್ಲಿನ ವ್ಯವಹಾರ ಬಂದ್ ಮಾಡಿ ಬೆಳಗಾವಿಗೆ ಸ್ಥಳಾಂತರ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯಲ್ಲೂ ಕೆಲವರು ದೂರು ನೀಡಿದರೂ ಪೊಲೀಸರು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎನ್ನಲಾಗುತ್ತಿದೆ. ಕಂಪನಿ ಮೇಲೆ ದೂರುಗಳು ಬಂದಾಗ ಹಣದ ಆಮಿಷ ಒಡ್ಡಿ ಅದು ಬಹಿರಂಗವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/belagavi-next-big-scam-adityaraj-capital-lures-investors-60-percent-annual-returns-after-shivam-associates-fraud-gdp/articleshow-qg0ve9t"/>
        </item>
        <item>
            <title><![CDATA[ಬಾಗಲಕೋಟೆ: 16 ವರ್ಷ ಪೂರ್ಣ, ಕುಡಚಿ ರೈಲು ಮಾರ್ಗ ಅಪೂರ್ಣ! ಭೂಮಿ ಕಳಕೊಂಡ ರೈತರು ಕೋರ್ಟ್ ಮುಂದೆ]]></title>
            <link>https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33</link>
            <guid isPermaLink="true">https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33</guid>
            <pubDate>Fri, 22 May 2026 11:22:02 +0530</pubDate>
            <description><![CDATA[&lt;p&gt;ವರದಿ: ಶ್ರೀನಿವಾಸ ಬಬಲಾದಿ&lt;/p&gt;&lt;p&gt;2011ರಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿಯು ಭೂಸ್ವಾಧೀನ ವಿಳಂಬ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. 142ಕಿ.ಮೀ. ಪೈಕಿ ಕೇವಲ 38ಕಿ.ಮೀ. ಪೂರ್ಣಗೊಂಡಿದ್ದು, ರೈಲು ಸಂಚಾರ ಆರಂಭವಾಗದ ಕಾರಣ ಸ್ಥಳೀಯ ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks72w4aqjtcxtm0e6zqx19ez,imgname-1--3--1779428102486.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಶ್ರೀನಿವಾಸ ಬಬಲಾದಿ&lt;/p&gt;&lt;p&gt;2011ರಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿಯು ಭೂಸ್ವಾಧೀನ ವಿಳಂಬ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. 142ಕಿ.ಮೀ. ಪೈಕಿ ಕೇವಲ 38ಕಿ.ಮೀ. ಪೂರ್ಣಗೊಂಡಿದ್ದು, ರೈಲು ಸಂಚಾರ ಆರಂಭವಾಗದ ಕಾರಣ ಸ್ಥಳೀಯ ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿವೆ.&lt;/p&gt;&lt;img&gt;&lt;p&gt;ಬಾಗಲಕೋಟೆ: ಕೇಂದ್ರ ಬಜೆಟ್&zwnj;ನಲ್ಲಿ ಘೋಷಣೆಯಾಗಿ ರಾಜ್ಯದ ಆರ್ಥಿಕ ಸಹಾಯದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಕಾಮಗಾರಿ ಆಮೆಗತಿಯಲ್ಲಿ ನಡೆದಿದೆ. ಬಾಗಲಕೋಟೆಯಿಂದ ಕುಡಚಿವರೆಗಿನ 142 ಕಿ.ಮೀ ಉದ್ದದ ರೈಲ್ವೆ ಮಾರ್ಗದ ಕಾಮಗಾರಿಗೆ 2011 ರಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಲ್ಲಿಯವರೆಗೆ 38 ಕಿಮೀ ಮಾತ್ರ ಪೂರ್ಣಗೊಂಡಿದೆ. 108ಕಿ.ಮೀ ಕಾಮಗಾರಿ ಬಾಕಿ ಇದೆ. ಮಾರ್ಗ ನಿರ್ಮಾಣಕ್ಕೆ ಬೇಕಾದ ಭೂಸ್ವಾಧಿನದ ವೆಚ್ಚ ಹಾಗೂ ಕಾಮಗಾರಿಯ ಶೇ.50 ರಷ್ಟು ವೆಚ್ಚ ಭರಿಸುವ ವಾಗ್ದಾನದೊಂದಿಗೆ ಕೇಂದ್ರದ ಸಹಯೋಗದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಭೂಸ್ವಾಧೀನ ಮಾಡಿಕೊಡಬೇಕಾದ ರಾಜ್ಯದ ಅಧಿಕಾರಿಗಳ ವಿಳಂಬದಿಂದಾಗಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ.&lt;/p&gt;&lt;img&gt;&lt;p&gt;ಈ ಮಾರ್ಗ ಪೂರ್ಣಗೊಂಡರೆ ಸಿಮೆಂಟ್, ಲೈಮ್ ಸ್ಟೋನ್, ಸಕ್ಕರೆ ಸಾಗಾಣಿಕೆ ಸರಳವಾಗಲಿದ್ದು ವಾಣಿಜ್ಯ ಚಟುವಟಿಕೆಗೆ ಉತ್ತೇಜನ ಸಿಗಲಿದೆ. ರಾಜ್ಯದ ನಿರ್ಲಕ್ಷದಿಂದಾಗಿ ಈ ಮಾರ್ಗ ನಿರ್ಮಾಣದ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ವೇಗ ಪಡೆದಿಲ್ಲ. ರೈಲ್ವೆ ಮಾರ್ಗ ನಿರ್ಮಿಸಲು ಒಟ್ಟು 2,460 ಎಕರೆ ಭೂಮಿ ಬೇಕಿದ್ದು, ಬಹುತೇಕ ಭೂಮಿ ಸ್ವಾಧೀನಗೊಂಡಿದೆ. ಆದರೆ, ಸ್ವಾಧೀನಪಡಿಸಿಕೊಂಡು ಭೂಮೀಯ ಮಾಲೀಕರು ನ್ಯಾಯಾಲಗಳ ಮೊರೆ ಹೋಗಿದ್ದಾರೆ.&lt;/p&gt;&lt;img&gt;&lt;p&gt;ಬಾಗಲಕೋಟೆ ಜಿಲ್ಲೆಯ ಭೂ ಸ್ವಾಧೀನಕ್ಕೆ ₹365 ಕೋಟಿ, ಬೆಳಗಾವಿ ಜಿಲ್ಲೆಗೆ ₹160 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 142 ಕಿ.ಮೀ ಮಾರ್ಗದ ಕಾಮಗಾರಿಗೆ 2010-11 ರಲ್ಲಿ ₹986 ಕೋಟಿ ವೆಚ್ಚಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈಗ ಅದರ ಮೊತ್ತ ₹3,128 ಕೋಟಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇಲ್ಲಿಯವರೆಗೆ ಶೇ.39 ರಷ್ಟು ಭೌತಿಕ ಪ್ರಗತಿಯಾಗಿದ್ದರೆ, ಶೇ.30 ರಷ್ಟು ಆರ್ಥಿಕ ಪ್ರಗತಿಯಾಗಿದೆ. ಈಗಾಗಲೇ ಪೂರ್ಣಗೊಂಡಿರುವ ಮಾರ್ಗದಲ್ಲಿ ಗೂಡ್ಸ್ ರೈಲು ಸಂಚಾರ ಆರಂಭಿಸಿದೆ. ದಾದನಟ್ಟಿ-ಯಾದವಾಡ ನಡುವಿನ 15ಕಿ.ಮೀ ಮಾರ್ಗದಲ್ಲಿ ಬರುವ ಒಂಭತ್ತು ಸಣ್ಣ ಸೇತುವೆ, ಏಳು ಕೇಳಸೇತುವೆ, ಒಂದು ಬೃಹತ್ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಯಾದವಾಡ-ಜಮಖಂಡಿ ನಡುವೆ ಶೇ.96 ರಷ್ಟು ಜಮಖಂಡಿ-ಜಗದಾಳ ನಡುವೆ ಶೇ.93 ರಷ್ಟು, ಜಗದಾಳ-ಹಾರೂಗೇರಿ ನಡುವಿನ ಶೇ.91 ರಷ್ಟು ಹಾಗೂ ಹಾರೂಗೇರಿ-ಕುಡಚಿ ನಡುವೆ ಶೇ.60 ರಷ್ಟು ಭೂಸ್ವಾಧಿನ ಆಗಿದೆ. ಲೋಕಾಪುರದಿಂದ ಯಾದವಾಡವರೆಗಿನ 21 ಕಿ.ಮೀ ಮಾರ್ಗದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ.&lt;/p&gt;&lt;img&gt;&lt;p&gt;ಕೆಲ ತಿಂಗಳುಗಳ ಹಿಂದೆ ರೈಲ್ವೆ ಮಾರ್ಗ ವೀಕ್ಷಣೆಗೆ ಬಂದಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 2027ರ ಹೊತ್ತಿಗೆ ಯೋಜನೆ ಪೂರ್ಣಗೊಳಿಸಲಾಗುವುದು ಎಂದಿದ್ದರು. ಆದರೆ, ಈಗ ನಡೆದಿರುವ ಕಾಮಗಾರಿ ವೇಗೆ ನೋಡಿದರೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಸರಕು ಸಾಗಣೆಗೆಯ ಗೂಡ್ಸ್ ರೈಲು ಸಂಚಾರ ಆರಂಭಗೊಂಡಿದೆ. ಆದರೆ, 2025 ಮಾರ್ಚನಿಂದ ಆರಂಭಗೊಳ್ಳಲಿದೆ ಎಂದು ಸಚಿವರೇ ಹೇಳಿದ್ದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿಲ್ಲ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ರೈಲು ಸಂಚಾರ ಕೂಡ ಆರಂಭಿಸಬೇಕು ಎಂಬ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ನೆನೆಗುದಿಗೆ ಬಿದ್ದು ಶತಮಾನದ ಅಂಚಿಗೆ ಬಂದು ನಿಂತ ಕುಡಚಿ-ಬಾಗಲಕೋಟ ರೈಲು ಮಾರ್ಗಕ್ಕೆ ಇನ್ನೂ ಯಾವಾಗ ಸಮಯ ಕೂಡಿಬರುತ್ತದೆಯೋ ಗೊತ್ತಾಗುತ್ತಿಲ್ಲ.&lt;/p&gt;&lt;img&gt;&lt;p&gt;ರೈಲ್ವೆ ಇಲಾಖೆಗೆ ಪ್ರಥಮವಾಗಿ ಪ್ಯಾಸೆಂಜರ್&zwnj; ರೈಲು ಪ್ರಾರಂಭಿಸಲು ಮನವಿ ಮಾಡಲಾಗಿದೆ. ರೈಲ್ವೆ ಇಲಾಖೆ ಮೊಂಡ ಸ್ವಭಾವ ಬಿಟ್ಟು ಜಿಲ್ಲೆಯ ಜನರ ಅಪೇಕ್ಷೆಯಂತೆ ಪ್ಯಾಸೆಂಜರ್&zwnj; ರೈಲು ಪ್ರಾರಂಭಿಸಿ ನಂತರ ಸರಕು ಸಾಗಾಣಿಕೆ ವ್ಯವಹಾರ ನಡೆಸುವುದು ಒಳ್ಳೆಯದು. ಇಲ್ಲದಿದ್ದರೇ ಹೋರಾಟ ಸಮಿತಿಯು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪಕ್ಷಾತಿತ ಹೋರಾಟ ಮಾಡಿ ರೈಲ್ವೆ ಇಲಾಖೆಗೆ ಬಿಸಿ ತಟ್ಟಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಬಾಗಲಕೋಟೆ- ಮೈಸೂರು (ಬಸವ ಎಕ್ಸ್&zwnj;ಪ್ರೆಸ್&zwnj;) ರೈಲನ್ನು ಲೋಕಾಪುರ ರೈಲು ನಿಲ್ದಾಣದಿಂದಲೇ ಆರಂಭಿಸಬೇಕು. ಇದರಿಂದ ಲೋಕಾಪುರ ಹಾಗೂ ಸುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಬೆಂಗಳೂರು ಆಸ್ಪತ್ರೆ, ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ, ವಿವಿಧ ಪುಣ್ಯಕ್ಷೇತ್ರಗಳಿಗಾಗಿ ತೆರಳುವವರಿಗೆ ಅನುಕೂಲ, ಮೈಸೂರಿನಿಂದ ಬಾಗಲಕೋಟೆ ಬೆಳಗ್ಗೆ 11.15ಕ್ಕೆ ರೈಲು ಬರುತ್ತದೆ. ಮಧ್ಯಾಹ್ನ 2.20 ಮರಳಿ ಹೋಗುತ್ತದೆ ಆ ನಡುವೆ 3 ಗಂಟೆ ಸಮಯವಿರುವುದರಿಂದ ಲೋಕಾಪುರವರೆಗೆ ವಿಸ್ತರಿಸಬೇಕೆಂದು ಹಿರಿಯ ನಾಗರಿಕರ ವೇದಿಕೆ ಪದಾಧಿಕಾರಿಗಳು ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿ ಒತ್ತಾಯಿಸಿದ್ದಾರೆ.&lt;/p&gt;&lt;p&gt;ಬಾಗಲಕೋಟೆ-ಲೋಕಾಪುರ ನಡುವೆ ಡೆಮೊ ರೈಲು ಆರಂಭಿಸುವ ಘೋಷಣೆ ಮಾಡಲಾಗಿದೆ. ಆದರೆ, ಇನ್ನೂ ಆರಂಭವಾಗಿಲ್ಲ. ಬಾಗಲಕೋಟೆ-ಲೋಕಾಪುರ ಮಾತ್ರ ಆರಂಭಿಸಿದರೇ ಉಪಯೋಗವಿಲ್ಲ, ದೂರದ ಊರುಗಳಿಗೂ ಸಂಪರ್ಕ ಕಲ್ಪಿಸಬೇಕು. ರೈಲ್ವೆ ಮಾರ್ಗ ಶೀರ್ಘ ಪೂರ್ಣಗೊಳ್ಳಬೇಕು. ಇದು ಈಡೇರುವವರೆಗೆ ಹೋರಾಟ ನಿಲ್ಲದು.&lt;/p&gt;&lt;p&gt;-ಕುತುಬುದ್ಧೀನ್ ಖಾಜಿ, ಕರ್ನಾಟಕ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷರು&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bagalkot-kudachi-railway-project-delayed-16-years-on-only-38-km-complete-gdp-ruhoe33"/>
        </item>
        <item>
            <title><![CDATA[ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಿದ್ದ ವಿಲ್ಸನ್ ಗಾರ್ಡನ್ ನಾಗ ರಿಲೀಸ್; ಆದರೆ, ದಾಸನಿಗೆ ಬಿಡುಗಡೆ ಭಾಗ್ಯ ಬರಲಿಲ್ಲ!]]></title>
            <link>https://kannada.asianetnews.com/state/actor-darshan-jail-friend-rowdy-sheeter-wilson-garden-naga-released-belagavi-hindalga-sat/articleshow-t05ov4t</link>
            <guid isPermaLink="true">https://kannada.asianetnews.com/state/actor-darshan-jail-friend-rowdy-sheeter-wilson-garden-naga-released-belagavi-hindalga-sat/articleshow-t05ov4t</guid>
            <pubDate>Thu, 21 May 2026 20:51:34 +0530</pubDate>
            <description><![CDATA[&lt;p&gt;ಬೆಂಗಳೂರಿನ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಟ ದರ್ಶನ್ ಜೊತೆಗಿನ ಫೋಟೋ ವಿವಾದದಿಂದಾಗಿ ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದನು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j64vf25pbnqs209395e18r66,imgname-wilson-garden-naga-crime-history.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮೇ 21): ರಾ&lt;/strong&gt;ಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಬೆಂಗಳೂರಿನ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಈತನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಶನಿವಾರ ಜೈಲಿನಿಂದ ಹೊರಬಂದಿದ್ದಾನೆ.&lt;/p&gt;&lt;h3&gt;&lt;strong&gt;ಯಾರು ಈ ವಿಲ್ಸನ್ ಗಾರ್ಡನ್ ನಾಗ?&lt;/strong&gt;&lt;/h3&gt;&lt;p&gt;ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹೇಶ್ ಕೊಲೆ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಾಗಾ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಈತ, ಅಲ್ಲಿ ನಡೆದ ಕೆಲವು ವಿವಾದಾತ್ಮಕ ಘಟನೆಗಳಿಂದಾಗಿ ಸುದ್ದಿಯಾಗಿದ್ದ.&lt;/p&gt;&lt;h3&gt;&lt;strong&gt;ದರ್ಶನ್ ಜೊತೆಗಿನ 'ಫೋಟೋ' ವಿವಾದ:&lt;/strong&gt;&lt;/h3&gt;&lt;p&gt;ವಿಲ್ಸನ್ ಗಾರ್ಡನ್ ನಾಗಾ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು ನಟ ದರ್ಶನ್ ಜೈಲು ಸೇರಿದಾಗ. ಪರಪ್ಪನ ಅಗ್ರಹಾರ ಜೈಲಿನ ಹುಲ್ಲುಹಾಸಿನ ಮೇಲೆ ಕುಳಿತು ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರು ಆರಾಮವಾಗಿ ಚಹಾ ಕುಡಿಯುತ್ತಾ, ಸಿಗರೇಟ್ ಸೇವಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜೈಲಿನಲ್ಲಿ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ಬಗ್ಗೆ ಸಾರ್ವಜನಿಕವಾಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಮತ್ತು ಜೈಲು ಇಲಾಖೆ, ಪ್ರಭಾವಿ ಕೈದಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಿತ್ತು.&lt;/p&gt;&lt;h2&gt;&lt;strong&gt;ಹಿಂಡಲಗಾ ಜೈಲಿಗೆ ಶಿಫ್ಟ್:&lt;/strong&gt;&lt;/h2&gt;&lt;p&gt;ದರ್ಶನ್ ಜೊತೆಗಿನ ಫೋಟೋ ವಿವಾದದ ನಂತರ, 2024ರ ಜುಲೈ ತಿಂಗಳಿನಲ್ಲಿ ವಿಲ್ಸನ್ ಗಾರ್ಡನ್ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಈತ ಹಿಂಡಲಗಾ ಜೈಲಿನ ಹೈ ಸೆಕ್ಯೂರಿಟಿ ವಿಭಾಗದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ.&lt;/p&gt;&lt;h3&gt;&lt;strong&gt;ಅನಾರೋಗ್ಯ ಮತ್ತು ಬಿಡುಗಡೆ:&lt;/strong&gt;&lt;/h3&gt;&lt;p&gt;ಕಳೆದ ಕೆಲವು ದಿನಗಳಿಂದ ವಿಲ್ಸನ್ ಗಾರ್ಡನ್ ನಾಗ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ಆತನಿಗೆ ಪೊಲೀಸ್ ಭದ್ರತೆಯೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ಅವಧಿಯಲ್ಲಿ ಆತನ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಿದ ನಂತರ, ಶನಿವಾರ ಅಧಿಕೃತವಾಗಿ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡಿದೆ.&lt;/p&gt;&lt;p&gt;ಬಿಮ್ಸ್ ಆಸ್ಪತ್ರೆಯಿಂದಲೇ ಬಿಡುಗಡೆಯಾದ ನಾಗಾ, ಅಲ್ಲಿಂದ ನೇರವಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾನೆ ಎಂದು ತಿಳಿದುಬಂದಿದೆ. ಒಟ್ಟಾರೆಯಾಗಿ, ಜೈಲಿನೊಳಗೆ ದರ್ಶನ್ ಜೊತೆ ಮಜಾ ಮಾಡಿದ್ದ ರೌಡಿಶೀಟರ್ ಈಗ ಮತ್ತೆ ಹೊರಜಗತ್ತಿಗೆ ಬಂದಿರುವುದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.&lt;/p&gt;&lt;h2&gt;&lt;strong&gt;ನಟ ದರ್ಶನ್&zwnj;ಗೆ ಒಂದು ವರ್ಷ ಜಾಮೀನು ಇಲ್ಲ:&lt;/strong&gt;&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್, ತಮ್ಮ ಕೇಸಿನ ವಿಚಾರಣೆ ಬೇಗ ಬೇಗ ನಡೆಸುತ್ತಿಲ್ಲ. ಹೀಗಾಗಿ, ಜಾಮೀನು ನೀಡುವಂತೆ ಸುಪ್ರೀಂ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, &amp;nbsp;ಸುಪ್ರೀಂ ಕೋರ್ಟ್ ಜಾಮೀನು ನೀಡದೇ ಇನ್ನು ಒಂದು ವರ್ಷದೊಳಗೆ ಅವರ ಕೇಸಿನ ವಿಚಾರಣೆ ಮುಕ್ತಾಯಗೊಳಿಸಿ ಆದೇಶ ನೀಡುವಂತೆ ಕೆಳ ಹಂತದ ನ್ಯಾಯಾಲಯಗಳಿಗೆ ಆದೇಶವನ್ನು ನೀಡಿದೆ. ಅಲ್ಲಿವರೆಗೂ ಜಾಮೀನು ಕೇಳಿಕೊಂಡು ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹೀಗಾಗಿ, ನಟ ದರ್ಶನ್ ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲಿಯೇ ಕಾಲ ಕಳೆಯುವುದು ಅನಿವಾರ್ಯ ಆಗಿದೆ.&lt;/p&gt;&lt;p&gt;ಇತ್ತೀಚೆಗೆ ನಟ ದರ್ಶನ&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/actor-darshan-jail-friend-rowdy-sheeter-wilson-garden-naga-released-belagavi-hindalga-sat/articleshow-t05ov4t"/>
        </item>
        <item>
            <title><![CDATA[ಬೆಳಗಾವಿ ಕರ್ನಾಟಕದ್ದೇ ಅಂತಾ ಹೇಳೋಕೆ ಪಾಲಿಕೆಗೆ ಏಕೆ ಭಯ? ಹಿಂಜರಿಕೆ? ಕನ್ನಡ ಸಂಘಟನೆಗಳು ಹೋರಾಟ ಮಾಡಬೇಕಾದ ಪರಿಸ್ಥಿತಿಗೆ ಯಾರು ಕಾರಣ?]]></title>
            <link>https://kannada.asianetnews.com/karnataka-districts/belagavi-kannada-outfits-siege-city-corp-over-border-resolution-rav/articleshow-t3u3xzk</link>
            <guid isPermaLink="true">https://kannada.asianetnews.com/karnataka-districts/belagavi-kannada-outfits-siege-city-corp-over-border-resolution-rav/articleshow-t3u3xzk</guid>
            <pubDate>Wed, 27 May 2026 09:55:31 +0530</pubDate>
            <description><![CDATA[&lt;p&gt;ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಮಹಾನಗರ ಪಾಲಿಕೆ ಅಂಗೀಕರಿಸಬೇಕೆಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kskt1gxaztetmh171d92f0jy,imgname-----------------------2026-05-27t094016.510-1779855049642.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಳಗಾವಿ (ಮೇ.27): &lt;/strong&gt;ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.&lt;/p&gt;&lt;p&gt;ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಅಶೋಕ ಚಂದರಗಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ನೂರಾರು ಜನರು ಭಾಗವಹಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಪಾಲಿಕೆ ಕಚೇರಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.&lt;/p&gt;&lt;p&gt;ಜಿಲ್ಲಾಧಿಕಾರಿ ಕಚೇರಿ ಆವರಣದ ಪುನರ್&zwnj; ಪ್ರತಿಷ್ಠಾಪಿತ ಹಲ್ಮಿಡಿ ಶಾಸನಕ್ಕೆ ಪೂಜೆ ಸಲ್ಲಿಸಿದ ಪ್ರತಿಭಟನಾಕಾರರು ಮೆರವಣಿಗೆಯ ಮೂಲಕ ಪಾಲಿಕೆ ಕಚೇರಿಯತ್ತ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಕ್ಕೆ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಪ್ರತಿಭಟನಾಕಾರರು, &lsquo;ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ, ಕನ್ನಡಿಗರ ಭಾವನೆಗಳಿಗೆ ಗೌರವ ನೀಡಿ&rsquo; ಎಂಬ ಘೋಷಣೆಗಳನ್ನು ಕೂಗಿದರು. ಹಲವರು ರಸ್ತೆಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;ಅಖಂಡ ಕರ್ನಾಟಕ ಬಂದ್&zwnj; ಎಚ್ಚರಿಕೆ:&lt;/h2&gt;&lt;p&gt;ಬೆಳಗಾವಿ ಮಹಾನಗರ ಪಾಲಿಕೆ ಯಾವ ನೆಲದಲ್ಲಿದೆ ಎಂಬುದನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಅದು ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಪಾಲಿಕೆಯಲ್ಲಿ ಅಂಗೀಕರಿಸಬೇಕು. ಒಂದು ವಾರದೊಳಗೆ ನಿರ್ಣಯ ಕೈಗೊಳ್ಳದಿದ್ದರೆ ಬೆಳಗಾವಿಯಲ್ಲಿ ಕಂಡು ಕೇಳರಿಯದ ರೀತಿ ಹೋರಾಟ ರೂಪುಗೊಳ್ಳಲಿದೆ. ಜೂ.4ರಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಕರೆದು ಹೋರಾಟದ ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ವಾಟಾಳ್&zwnj; ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-kannada-outfits-siege-city-corp-over-border-resolution-rav/articleshow-t3u3xzk"/>
        </item>
        <item>
            <title><![CDATA[ಶಿವಂ ಅಸೋಸಿಯೇಟ್ಸ್ ₹4,500 ಕೋಟಿ ಹಗರಣ,  ಕೋರ್ಟ್‌ನಲ್ಲಿ ಕಣ್ಣೀರು, ಬೆಳಗಾವಿಯಿಂದ ಬೆಂಗಳೂರಿಗೆ ಆರೋಪಿ ಶಿಫ್ಟ್!]]></title>
            <link>https://kannada.asianetnews.com/karnataka-districts/belagavi-rs4500-crore-scam-kingpin-shivanand-neelannavar-handed-over-to-cid-custody-shifted-to-bengaluru-gdp/articleshow-vdarpow</link>
            <guid isPermaLink="true">https://kannada.asianetnews.com/karnataka-districts/belagavi-rs4500-crore-scam-kingpin-shivanand-neelannavar-handed-over-to-cid-custody-shifted-to-bengaluru-gdp/articleshow-vdarpow</guid>
            <pubDate>Tue, 19 May 2026 15:47:55 +0530</pubDate>
            <description><![CDATA[&lsquo;ಶಿವಂ ಅಸೋಸಿಯೇಟ್ಸ್&rsquo; ಸಂಸ್ಥೆಯ ₹4,500 ಕೋಟಿ ವಂಚನೆ ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ್&zwnj;ನನ್ನು 10 ದಿನಗಳ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಹೂಡಿಕೆದಾರರಿಂದ ಮೊದಲ ಅಧಿಕೃತ ದೂರು ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krzvgexpt4bdd8gcn5zk079s,imgname-shivanand-neelannavar-1779185499030.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ 'ಶಿವಂ ಅಸೋಸಿಯೇಟ್ಸ್' ಸಂಸ್ಥೆಯ ₹4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ್&zwnj;ನನ್ನು ಬೆಳಗಾವಿಯ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಆರ್ಥಿಕ ಅಪರಾಧಗಳ ತನಿಖಾ ದಳದ (CID) ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.&lt;/p&gt;&lt;p&gt;ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಿಂದ ಹೊರಟ ಸಿಐಡಿ ಅಧಿಕಾರಿಗಳ ತಂಡ, ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಬೆಂಗಳೂರಿನ ಮುಖ್ಯ ಕಚೇರಿಗೆ ಶಿಫ್ಟ್ ಮಾಡಿದೆ. ಒಂದು ಕಾರಿನಲ್ಲಿ ಆರೋಪಿಯನ್ನು ಕೂರಿಸಲಾಗಿದ್ದರೆ, ಮತ್ತೊಂದು ಕಾರಿನಲ್ಲಿ ಜಪ್ತಿ ಮಾಡಲಾದ ಮಹತ್ವದ ದಾಖಲೆಗಳು, ಕಂಪ್ಯೂಟರ್, ಲ್ಯಾಪ್&zwnj;ಟಾಪ್, ಪೆನ್ ಡ್ರೈವ್ ಹಾಗೂ ಮೊಬೈಲ್&zwnj; ಫೋನ್&zwnj;ಗಳನ್ನು ಬೆಂಗಳೂರಿಗೆ ಕೊಂಡೊಯ್ಯಲಾಗಿದೆ.&lt;/p&gt;&lt;h2&gt;ಕಾಗವಾಡ ಠಾಣೆಯಲ್ಲಿ ದಾಖಲಾಯ್ತು ಮೊದಲ ಅಧಿಕೃತ ಖಾಸಗಿ ದೂರು!&lt;/h2&gt;&lt;p&gt;ಇಷ್ಟು ದಿನ ಸಾಮಾಜಿಕ ಜಾಲತಾಣಗಳು ಹಾಗೂ ಇಲಾಖೆಯ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಯುತ್ತಿತ್ತು. ಆದರೆ ಪ್ರಕರಣ ಸಿಐಡಿಗೆ ಹಸ್ತಾಂತರವಾಗುತ್ತಿದ್ದಂತೆ, ಕಾಗವಾಡ ಪೊಲೀಸ್ ಠಾಣೆಯಲ್ಲಿ ಹೂಡಿಕೆದಾರನೊಬ್ಬನಿಂದ ಮೊದಲ ಅಧಿಕೃತ ಖಾಸಗಿ ದೂರು ದಾಖಲಾಗಿದೆ. ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ದೂರು ನೀಡಿದ ಮೊದಲ ವ್ಯಕ್ತಿಯಾಗಿದ್ದಾರೆ.&lt;/p&gt;&lt;p&gt;ದೂರಿನ ವಿವರಗಳ ಪ್ರಕಾರ, &quot;ಪ್ರತಿ ತಿಂಗಳು ಶೇ. 36ರಷ್ಟು ಭಾರಿ ಬಡ್ಡಿ ನೀಡುವುದಾಗಿ ಶಿವಾನಂದ ನೀಡಿದ್ದ ಆಮಿಷಕ್ಕೆ ಒಳಗಾಗಿದ್ದ ಕೃಷ್ಣಾ ಅಪ್ರಾಜ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಹಂತ ಹಂತವಾಗಿ ಒಟ್ಟು 5 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದ್ದರು. ಆದರೆ ಠೇವಣಿ ಪಡೆದ ನಂತರ ಹೆಚ್ಚಿನ ಬಡ್ಡಿ ನೀಡದೆ ವಂಚಿಸಲಾಗಿದೆ,&quot; ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.&lt;/p&gt;&lt;h2&gt;ಬೆಂಗಳೂರಿಗೆ ಶಿಫ್ಟ್ ಮಾಡಲು ಸಿಐಡಿ ನೀಡಿದ ಕಾರಣಗಳೇನು?&lt;/h2&gt;&lt;p&gt;ಪ್ರಕರಣದ ತನಿಖೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸಿಐಡಿ ಅಧಿಕಾರಿಗಳು, ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ಯಲು ನ್ಯಾಯಾಲಯದ ಅನುಮತಿ ಕೋರಿದ್ದರು. ಸಿಐಡಿ ತನ್ನ ಅರ್ಜಿಯಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಿತ್ತು:&lt;/p&gt;&lt;p&gt;ಶಿವಾನಂದ ನೀಲಣ್ಣವರ್ ನಡೆಸುತ್ತಿದ್ದ ಆರ್ಥಿಕ ವ್ಯವಹಾರಗಳು ಕೇವಲ ಬೆಳಗಾವಿಗೆ ಸೀಮಿತವಾಗಿಲ್ಲ, ಇದು ಅಂತರ ಜಿಲ್ಲಾ ಹಾಗೂ ಅಂತರರಾಜ್ಯ ಮಟ್ಟದ ಜಾಲವನ್ನು ಹೊಂದಿದೆ. ವೆಬ್&zwnj;ಸೈಟ್ ಹಾಗೂ ಮೊಬೈಲ್ ಆ್ಯಪ್&zwnj;ಗಳ ಮೂಲಕ ಹಣದ ಹೂಡಿಕೆ ಮಾಡಿಸಿಕೊಳ್ಳಲಾಗಿದೆ. ಇಷ್ಟು ದೊಡ್ಡ ಮಟ್ಟದ ಹಣದ ಮೂಲ ಯಾವುದು? ಡಿಜಿಟಲ್ ವ್ಯವಹಾರಗಳು ಹೇಗೆ ನಡೆದಿವೆ? ವಿವಿಧ ಬ್ಯಾಂಕ್ ಖಾತೆಗಳು, ರಿಯಲ್ ಎಸ್ಟೇಟ್ ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾದ ಹಣದ ವರ್ಗಾವಣೆ ಕುರಿತು ಸಮಗ್ರ ವಿಚಾರಣೆಯಾಗಬೇಕಿದೆ.&lt;/p&gt;&lt;p&gt;ಪ್ರಾಥಮಿಕ ತನಿಖೆಯ ಪ್ರಕಾರ, 'ಶಿವಂ ಅಸೋಸಿಯೇಟ್ಸ್' ಸಂಸ್ಥೆಯು ಆರ್&zwnj;ಬಿಐ (RBI) ನೋಂದಣಿ ಹೊಂದಿರಲಿಲ್ಲ. ಆದರೂ &quot;ಒಂದು ಲಕ್ಷ ರೂಪಾಯಿ ಹೂಡಿಕೆಗೆ ಪ್ರತಿ ತಿಂಗಳು 3 ಪರ್ಸೆಂಟ್ ಲಾಭ&quot; ಎಂಬ ಆಮಿಷ ಒಡ್ಡಿ ಸುಮಾರು 35 ಸಾವಿರಕ್ಕೂ ಹೆಚ್ಚು ಜನರಿಂದ ₹1,000 ಕೋಟಿಗೂ ಅಧಿಕ ಹಣದ ವ್ಯವಹಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ನ್ಯಾಯಾಲಯದಲ್ಲಿ ನಡೆದ ವಾದವೇನು?&lt;/h2&gt;&lt;p&gt;ಸಿಐಡಿ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರಾದ ಗಂಗಾಧರ ಅವರು ಆರೋಪಿಯನ್ನು 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು. ವಿಚಾರಣೆ ವೇಳೆ ನ್ಯಾಯಾಧೀಶರು ಶಿವಾನಂದ ನೀಲಣ್ಣವರ ಆರೋಗ್ಯದ ಬಗ್ಗೆ ಪ್ರಶ್ನಿಸಿದರು. ಆಗ ನನಗೆ ಬಿಪಿ ಇದೆ ಎಂದು ಆರೋಪಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಸಂಬಂಧಪಟ್ಟ ವೈದ್ಯರಿಂದ ಚಿಕಿತ್ಸೆ, ಮಾತ್ರೆ ಸೇರಿದಂತೆ ಅಗತ್ಯ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.&lt;/p&gt;&lt;p&gt;ಈ ವೇಳೆ ಶಿವಾನಂದ, 35 ಸಾವಿರ ಜನರಿಗೆ ಹಣ ಬೇಡ, ನಾನು ಬೇಕಾಗಿದ್ದೇನೆ ಎಂದು ಭಾವುಕರಾಗಿ ಹೇಳಿದರು. ಈ ಮಾತಿಗೆ ತಕ್ಷಣ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಜನರಿಗೆ ಬೇಕಾಗಿರಬಹುದು. ನೀವು ಒಳ್ಳೆಯ ಕೆಲಸ ಮಾಡಿರಬಹುದು. ಅದು ನನಗೆ ಗೊತ್ತಿಲ್ಲ. ಆದರೆ ಅಮಾಯಕ ಜನರಿಗೆ ಅನ್ಯಾಯ ಆಗಬಾರದು. ಸರ್ಕಾರ ಜನರ ತಂದೆ-ತಾಯಿ ಇದ್ದಂತೆ. ಅವರ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಕಟ್ಟುನಿಟ್ಟಾಗಿ ಹೇಳಿದರು. ನ್ಯಾಯಾಧೀಶರು ವಿಚಾರಣೆ ವೇಳೆ ಸಮಾಜದಲ್ಲಿ ಈ ಹಿಂದೆ ನಡೆದ ಅನೇಕ ಹಣಕಾಸು ವಂಚನೆ ಪ್ರಕರಣಗಳನ್ನು ಉಲ್ಲೇಖಿಸಿದಂತೆ ಮಾತನಾಡಿದರು.&lt;/p&gt;&lt;p&gt;ಸಾಕಷ್ಟು ಜನ ಹಣ ಪಡೆದು ಓಡಿ ಹೋಗಿರುವ ಉದಾಹರಣೆಗಳಿವೆ. ಇತಿಹಾಸದಿಂದ ಪಾಠ ಕಲಿಯಲು ಈ ರೀತಿಯ ಕಾನೂನುಗಳನ್ನು ತರಲಾಗಿದೆ. ಕಾನೂನಿನ ಅಡಿಯಲ್ಲಿ ನೀವು ಏನು ಮಾಡಿದ್ದೀರೋ ಅದು ಉಳಿಯುತ್ತದೆ ಎಂದು ತಿಳಿಸಿದರು. ಈ ವೇಳೆ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಸಂಸ್ಕೃತ ಶ್ಲೋಕವನ್ನೂ ಉಲ್ಲೇಖಿಸಿ, ಕಾನೂನು ಮತ್ತು ನ್ಯಾಯ ವ್ಯವಸ್ಥೆಯ ಮಹತ್ವವನ್ನು ನ್ಯಾಯಾಧೀಶರು ನೆನಪಿಸಿದರು.&lt;/p&gt;&lt;h2&gt;ಕೋರ್ಟ್ ಆವರಣದಲ್ಲಿ ಕಣ್ಣೀರಿಟ್ಟ ಆರೋಪಿ&lt;/h2&gt;&lt;p&gt;ವಿಚಾರಣೆ ಮುಗಿದು ಕೋರ್ಟ್ ಹಾಲ್&zwnj;ನಿಂದ ಹೊರಗೆ ಬರುತ್ತಿದ್ದಂತೆ, ಆವರಣದಲ್ಲಿ ನಿಂತಿದ್ದ ತನ್ನ ಸಹೋದರನನ್ನು ಕಂಡು ಶಿವಾನಂದ ನೀಲಣ್ಣವರ ತೀವ್ರ ಭಾವುಕರಾಗಿ ಕಣ್ಣೀರಿಟ್ಟರು. ಇದನ್ನು ಕಂಡು ಕೆಲ ಕ್ಷಣ ನ್ಯಾಯಾಲಯದ ಆವರಣದಲ್ಲಿ ಸಂಪೂರ್ಣ ಮೌನ ಆವರಿಸಿತ್ತು.&lt;/p&gt;&lt;h2&gt;ಸಿಐಡಿ ಮುಂದಿರುವ ಸವಾಲುಗಳೇನು?&lt;/h2&gt;&lt;p&gt;ಈ ಬೃಹತ್ ಹಗರಣದಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋದ ಸಾವಿರಾರು ಜನರಲ್ಲಿ ಬಹುತೇಕರು ಇನ್ನೂ ಅಧಿಕೃತವಾಗಿ ದೂರು ನೀಡಲು ಮುಂದೆ ಬಂದಿಲ್ಲ. ಇದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಂದೆ ಬಂದು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ &quot;ನನ್ನ ಬಳಿ 15 ಸಾವಿರ ಬಂದೂಕುಗಳಿವೆ&quot; ಎಂದು ಶಿವಾನಂದ ಹೇಳಿದ್ದ ಹಳೆಯ ವಿಡಿಯೋ ಕೂಡ ಈಗ ಸಿಐಡಿ ತನಿಖೆಯ ವ್ಯಾಪ್ತಿಯಲ್ಲಿದೆ. ಈ ಹಣ ಯಾರ ಖಾತೆಗೆ ಹೋಗಿದೆ? ಯಾರ ಹೆಸರಲ್ಲಿ ಆಸ್ತಿ ಖರೀದಿಯಾಗಿದೆ? ಈ ಜಾಲದ ಹಿಂದೆ ರಾಜಕೀಯ ಅಥವಾ ಆರ್ಥಿಕ ಪ್ರಭಾವಿಗಳ ಹಸ್ತವಿದೆಯೇ? ಎಂಬ ಪ್ರಶ್ನೆಗಳಿಗೆ ಸಿಐಡಿ ಈಗ ಉತ್ತರ ಹುಡುಕಬೇಕಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/belagavi-rs4500-crore-scam-kingpin-shivanand-neelannavar-handed-over-to-cid-custody-shifted-to-bengaluru-gdp/articleshow-vdarpow"/>
        </item>
        <item>
            <title><![CDATA[ಬೆಂಗಳೂರಿನಿಂದ ಬೆಳಗಾವಿಗೆ ಟಿಕೆಟ್ ಸಿಗ್ತಿಲ್ಲವಾ? ಇಲ್ಲಿವೆ ಸ್ಪೆಷಲ್ ರೈಲುಗಳ ಡಿಟೈಲ್ಸ್]]></title>
            <link>https://kannada.asianetnews.com/gallery/travel/good-idea-to-choose-this-indian-railways-journey-to-get-a-confirmed-ticket-from-ksr-smvt-bengaluru-to-belagavi-mrq-vt08a3a</link>
            <guid isPermaLink="true">https://kannada.asianetnews.com/gallery/travel/good-idea-to-choose-this-indian-railways-journey-to-get-a-confirmed-ticket-from-ksr-smvt-bengaluru-to-belagavi-mrq-vt08a3a</guid>
            <pubDate>Wed, 27 May 2026 10:35:07 +0530</pubDate>
            <description><![CDATA[ಬೆಂಗಳೂರಿನಿಂದ ಬೆಳಗಾವಿಗೆ ಪ್ರತಿದಿನ ಸಂಚರಿಸುವ ರೈಲುಗಳಲ್ಲಿ ಕನ್ಫರ್ಮ್ ಟಿಕೆಟ್ ಸಿಗುವುದು ಕಷ್ಟಕರ. ಆದರೆ, ಪ್ರಯಾಣದ ದಿನಾಂಕದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ, ವಾರದ ಬೇರೆ ದಿನಗಳಲ್ಲಿ ಸಂಚರಿಸುವ ಹಲವು ವಿಶೇಷ ರೈಲುಗಳಲ್ಲಿ ಸುಲಭವಾಗಿ ಕನ್ಫರ್ಮ್ ಟಿಕೆಟ್ ಪಡೆಯಬಹುದು.]]></description>
            <media:content url="https://static.asianetnews.com/images/w-1280,h-720,format-jpg,imgid-01kskwmr6j1s6bpbzecn2z2mhr,imgname-indian-railway-1779857776850.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರಿನಿಂದ ಬೆಳಗಾವಿಗೆ ಪ್ರತಿದಿನ ಸಂಚರಿಸುವ ರೈಲುಗಳಲ್ಲಿ ಕನ್ಫರ್ಮ್ ಟಿಕೆಟ್ ಸಿಗುವುದು ಕಷ್ಟಕರ. ಆದರೆ, ಪ್ರಯಾಣದ ದಿನಾಂಕದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ, ವಾರದ ಬೇರೆ ದಿನಗಳಲ್ಲಿ ಸಂಚರಿಸುವ ಹಲವು ವಿಶೇಷ ರೈಲುಗಳಲ್ಲಿ ಸುಲಭವಾಗಿ ಕನ್ಫರ್ಮ್ ಟಿಕೆಟ್ ಪಡೆಯಬಹುದು.&lt;img&gt;&lt;p&gt;ಬೆಂಗಳೂರಿನಿಂದ ಬೆಳಗಾವಿಗೆ ರೈಲು ಮೂಲಕ ಪ್ರಯಾಣಿಸಬೇಕಾದ್ರೆ ಕನಿಷ್ಠ ಅಂದ್ರು 30 ದಿನಗಳ ಮುಂಚೆಯೇ ಟಿಕೆಟ್ ಕಾಯ್ಡಿರಿಸಬೇಕಾಗುತ್ತದೆ. ಪ್ರತಿದಿನ ಬೆಂಗಳೂರು ಮತ್ತು ಬೆಳಗಾವಿ ನಡುವೆ ಹಲವು ರೈಲುಗಳು ಸಂಚರಿಸಿದ್ರೂ ಕನ್ಫರ್ಮ್ ಟಿಕೆಟ್ ಸಿಗೋದು ವಿರಳವಾಗಿದೆ. ಪ್ರಯಾಣ ಸಮಯವನ್ನು ಕೊಂಚ ಬದಲಾವಣೆ ಮಾಡಿಕೊಂಡ್ರೆ ನಿಮಗೆ ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಗಳಿವೆ.&lt;/p&gt;&lt;img&gt;&lt;p&gt;ಬೆಂಗಳೂರಿನಿಂದ ಬೆಳಗಾವಿಗೆ ಪ್ರತಿದಿನ ವಿಶ್ವಮಾನವ ಎಕ್ಸ್&zwnj;ಪ್ರೆಸ್ (202676), ಬೆಳಗಾವಿ ಸೂಪರ್&zwnj;ಫಾಸ್ಟ್ ಎಕ್ಸ್&zwnj;ಪ್ರೆಸ್ (20653) ಮತ್ತು ರಾಣಿ ಚೆನ್ನಮ್ಮಾ ಎಕ್ಸ್&zwnj;ಪ್ರೆಸ್ ರೈಲುಗಳು ಚಲಿಸುತ್ತವೆ. ಈ ಮೂರು ಜನಪ್ರಿಯ ರೈಲುಗಳ ಹೊರತಾಗಿಯೂ ಹಲವು ಟ್ರೈನ್&zwnj; ಸಂಚರಿಸುತ್ತವೆ. ಆದ್ರೆ ಈ ರೈಲುಗಳು ಸೀಮಿತ ದಿನಗಳಲ್ಲಿ ಚಲಿಸುತ್ತವೆ. ಹಾಗಾಗಿ ಪ್ರಯಾಣದ ಸಮಯ ಬದಲಾಯಿಸಿಕೊಂಡ್ರೆ ನಿಮಗೆ ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಗಳು ಹೆಚ್ಚಿರುತ್ತವೆ.&lt;/p&gt;&lt;img&gt;&lt;p&gt;&lt;strong&gt;ರೈಲು ಸಂಖ್ಯೆ 19668: &lt;/strong&gt;ಪ್ಯಾಲೇಸ್ ಕ್ವೀನ್ ಹಮ್&zwnj;ಸಫರ್: ಈ ರೈಲು ಪ್ರತಿ ಗುರುವಾರ ಮಧ್ಯಾಹ್ನ 12.10ಕ್ಕೆ ತನ್ನ ಪ್ರಯಾಣ ಆರಂಭಿಸಿ ರಾತ್ರಿ 11.05ಕ್ಕೆ ಬೆಳಗಾವಿ ನಗರಕ್ಕೆ ತಲುಪುತ್ತದೆ.&lt;/p&gt;&lt;p&gt;&lt;strong&gt;ರೈಲು ಸಂಖ್ಯೆ 16534: &lt;/strong&gt;ಜೋಧಪುರ ಎಕ್ಸ್&zwnj;ಪ್ರೆಸ್: ಈ ರೈಲು ಪ್ರತಿ ಭಾನುವಾರ ಇರಲಿದೆ. ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 10.5ಕ್ಕೆ ಬೆಳಗಾವಿ ತಲುಪುತ್ತದೆ. (ಈ ರೈಲು ಗುಂತಕಲ್, ಬಳ್ಳಾರಿ, ಗದಗ, ಹುಬ್ಬಳ್ಳಿ ಮಾರ್ಗವಾಗಿ ಚಲಿಸೋದರಿಂದ ಪ್ರಯಾಣದ ಅವಧಿ 17 ಗಂಟೆಗೂ ಹೆಚ್ಚಾಗುತ್ತದೆ). ಇದೇ ಮಾರ್ಗವಾಗಿಯೇ ಅಜ್ಮೀರ್ ಗರೀಬ್ ನವಾಜ್ ಎಕ್ಸ್&zwnj;ಪ್ರೆಸ್ (16532) ಶುಕ್ರವಾರ ಬೆಂಗಳೂರಿನಿಂದ ಚಲಿಸುತ್ತದೆ.&lt;/p&gt;&lt;img&gt;&lt;p&gt;&lt;strong&gt;ರೈಲು ಸಂಖ್ಯೆ 20686:&lt;/strong&gt; ಗಾಂಧಿಧಾಮ ಸೂಪರ್&zwnj;ಫಾಸ್ಟ್: ಪ್ರತಿ ಶನಿವಾರ ಕೆಎಸ್&zwnj;ಆರ್ ಬೆಂಗಳೂರಿನಿಂದ ರಾತ್ರಿ 11.50ಕ್ಕೆ ಹೊರಟು ಮರುದಿನ ಬೆಳಗ್ಗೆ 10.05ಕ್ಕೆ ಬೆಳಗಾವಿ ತಲುಪಲಿದೆ.&lt;/p&gt;&lt;p&gt;&lt;strong&gt;ರೈಲು ಸಂಖ್ಯೆ 16210: &lt;/strong&gt;ಮೈಸೂರು-ಅಜ್ಮೀರ್ ಎಕ್ಸ್&zwnj;ಪ್ರೆಸ್: ಈ ರೈಲು ಮಂಗಳವಾರ ಮತ್ತು ಗುರುವಾರ ಕೆಎಸ್&zwnj;ಆರ್ ಬೆಂಗಳೂರಿನಿಂದ ರಾತ್ರಿ 11.50ಕ್ಕೆ ಹೊರಟು ಮರುದಿನ ಬೆಳಗ್ಗೆ 10.05ಕ್ಕೆ ಬೆಳಗಾವಿ ತಲುಪಲಿದೆ.&lt;/p&gt;&lt;img&gt;&lt;p&gt;&lt;strong&gt;ರೈಲು ಸಂಖ್ಯೆ 06543: &lt;/strong&gt;ಬಿಕಾನೇರ್ ಸ್ಪೆಷಲ್ ಎಕ್ಸ್&zwnj;ಪ್ರೆಸ್: ಪ್ರತಿ ಬುಧವಾರ ಯಶವಂತಪುರ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಪ್ರಯಾಣ ಆರಂಭಿಸಿ, ಸಂಜೆ 5.35ಕ್ಕೆ ಬೆಳಗಾವಿ ತಲುಪುತ್ತದೆ .&lt;/p&gt;&lt;p&gt;&lt;strong&gt;ರೈಲು ಸಂಖ್ಯೆ 22685: &lt;/strong&gt;ಚಂಡೀಗಢ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್&zwnj;ಪ್ರೆಸ್: ಬುಧವಾರ ಮತ್ತು ಶನಿವಾರ ಯಶವಂತಪುರ ನಿಲ್ದಾಣದಿಂದ ಮಧ್ಯಾಹ್ನ 3ಕ್ಕೆ ಹೊರಟು ರಾತ್ರಿ 12.15ಕ್ಕೆ ಬೆಳಗಾವಿ ತಲುಪುತ್ತದೆ.&lt;/p&gt;&lt;p&gt;&lt;strong&gt;ರೈಲು ಸಂಖ್ಯೆ 12629:&lt;/strong&gt; ಕರ್ನಾಟಕ ಸಂಪರ್ಕ ಕ್ರಾಂತಿ: ಮಂಗಳವಾರ ಮತ್ತು ಗುರುವಾರದಂದು ಯಶವಂತರಪುರ ನಿಲ್ದಾಣದಿಂದ ಮಧ್ಯಾಹ್ನ 3ಕ್ಕೆ ಪ್ರಯಾಣ ಆರಂಭಿಸಿ ರಾತ್ರಿ 12.15ಕ್ಕೆ ಬೆಳಗಾವಿ ನಿಲ್ದಾಣ ತಲುಪುತ್ತದೆ.&lt;/p&gt;&lt;img&gt;&lt;p&gt;ಈ ಮೇಲಿನ ಎಲ್ಲ ರೈಲುಗಳ ಜೊತೆ ಬೆಂಗಳೂರಿನಿಂದ ಬೆಳಗಾವಿಗೆ ಪಂಡರಪುರ ಎಕ್ಸ್&zwnj;ಪ್ರೆಸ್ (16541), ಶ್ರೀ ಗಂಗಾನಗರ ಹಮ್&zwnj;ಸಫರ್ (22498), ದಾದರ್ ಸೆಂಟ್ರಲ್ ಚಾಲುಕ್ಯ (11022) (11006), ಮುಂಬೈ ಎಲ್&zwnj;ಟಿಟಿ ಸ್ಪೆಷಲ್ ಎಕ್ಸ್&zwnj;ಪ್ರೆಸ್ (01014), ಮುಂಬೈ ಎಲ್&zwnj;ಟಿಟಿ ಎಕ್ಸ್&zwnj;ಪ್ರೆಸ್ (16553) ರೈಲುಗಳಿವೆ. ಹೆಚ್ಚಿನ ಮಾಹಿತಿಗಾಗಿ https://www.irctc.co.in/nget/train-search ಪೇಜ್&zwnj;ಗೆ ಭೇಟಿ ನೀಡಿ&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/travel/good-idea-to-choose-this-indian-railways-journey-to-get-a-confirmed-ticket-from-ksr-smvt-bengaluru-to-belagavi-mrq-vt08a3a"/>
        </item>
        <item>
            <title><![CDATA[ಬೆಳಗಾವಿ: ಶಿವಂ ಅಸೋಶಿಯೇಟ್ಸ್ 4500 ಕೋಟಿ ರೂ ಹಗರಣ, ನೀಲಣ್ಣವರ ವಿರುದ್ಧ ಪ್ರಪ್ರಥಮ ಖಾಸಗಿ ದೂರು ದಾಖಲು]]></title>
            <link>https://kannada.asianetnews.com/karnataka-districts/belagavi-rs4500-cr-scam-first-private-complaint-filed-against-shivam-associates-owner-shivanand-neelannavar-gdp/articleshow-wdxtmp5</link>
            <guid isPermaLink="true">https://kannada.asianetnews.com/karnataka-districts/belagavi-rs4500-cr-scam-first-private-complaint-filed-against-shivam-associates-owner-shivanand-neelannavar-gdp/articleshow-wdxtmp5</guid>
            <pubDate>Wed, 20 May 2026 15:16:18 +0530</pubDate>
            <description><![CDATA[ಶಿವಂ ಅಸೋಶಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧದ 4500 ಕೋಟಿ ರೂಪಾಯಿ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಖಾಸಗಿ ದೂರು ದಾಖಲಾಗಿದೆ. ಶೇ.36ರಷ್ಟು ಬಡ್ಡಿಯ ಆಮಿಷಕ್ಕೆ ಒಳಗಾಗಿ 5 ಲಕ್ಷ ರೂಪಾಯಿ ಹೂಡಿಕೆ ಮಾಡಿ ವಂಚನೆಗೊಳಗಾದ ಹೂಡಿಕೆದಾರರೊಬ್ಬರು ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಈ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krnmvt26350kbrd9rwywefj5,imgname-shivam-associates-shivanand-neelannavar--1--1778842986566.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಶಿವಂ ಅಸೋಶಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕೇಳಿಬಂದಿರುವ 4500 ಬಹುಕೋಟಿ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ. ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬ ಹೂಡಿಕೆದಾರರು ದೂರು ನೀಡಿದ್ದು, ಶೇ.36 ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ತನ್ನಿಂದ ₹5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡು ವಂಚನೆ ಎಸಗಿರುವುದಾಗಿ ದೂರಿನಲ್ಲಿ ಆರೋಪ ಮಾಡಿದ್ದಾರೆ.&lt;/p&gt;&lt;h2&gt;ಏಪ್ರಿಲ್ ತಿಂಗಳಲ್ಲಿ ಹಂತ ಹಂತವಾಗಿ ಹೂಡಿಕೆ&lt;/h2&gt;&lt;p&gt;ಏಪ್ರಿಲ್ ತಿಂಗಳಲ್ಲಿ ಹಂತ ಹಂತವಾಗಿ ₹5 ಲಕ್ಷ ಹಣವನ್ನು ಶಿವಾನಂದ ನೀಲಣ್ಣವರ ಸಂಸ್ಥೆಯಲ್ಲಿ ಹೂಡಿಕೆ ಮಾಡಲಾಗಿತ್ತು. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಬಡ್ಡಿ ಹಾಗೂ ಮೂಲಧನವನ್ನು ಮರಳಿ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ನಿಗದಿತ ಅವಧಿಯ ಬಳಿಕವೂ ಹಣ ಅಥವಾ ಬಡ್ಡಿ ನೀಡದೆ ವಂಚನೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h2&gt;ಮೊದಲ ಅಧಿಕೃತ ಪ್ರಕರಣ&lt;/h2&gt;&lt;p&gt;ಈಗಾಗಲೇ ಶಿವಾನಂದ ನೀಲಣ್ಣವರ ವಿರುದ್ಧದ ಬಹುಕೋಟಿ ಹೂಡಿಕೆ ವಂಚನೆ ಆರೋಪಗಳ ಕುರಿತು ಸಿಐಡಿ ತನಿಖೆ ಆರಂಭಿಸಿರುವ ಬೆನ್ನಲ್ಲೇ ಈ ದೂರು ದಾಖಲಾಗಿರುವುದು ಮಹತ್ವ ಪಡೆದಿದೆ. ನೀಲಣ್ಣವರ ವಿರುದ್ಧ ದಾಖಲಾಗಿರುವ ಮೊದಲ ಅಧಿಕೃತ ಪ್ರಕರಣ ಇದಾಗಿದ್ದು, ಕಾಗವಾಡ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಯ ವೇಳೆ ಇನ್ನಷ್ಟು ಹೂಡಿಕೆದಾರರು ದೂರು ನೀಡುವ ಸಾಧ್ಯತೆ ಇದ್ದು, ವಂಚನೆಯ ವ್ಯಾಪ್ತಿ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದಲೇ ಹೊರಬರಬೇಕಿದೆ. ಈಗಾಗಲೇ ನೀಲಣ್ಣವರ ವಿರುದ್ಧ ಸಿಐಡಿ ತನಿಖೆ ಮುಂದುವರಿದಿದ್ದು, ಸದ್ಯ ಬೆಳವಾವಿಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/belagavi-rs4500-cr-scam-first-private-complaint-filed-against-shivam-associates-owner-shivanand-neelannavar-gdp/articleshow-wdxtmp5"/>
        </item>
        <item>
            <title><![CDATA[ಸಿದ್ದರಾಮಯ್ಯ, ಡಿಕೆಶಿ ಅಲ್ಲ, 'ನಾನೇ ಮುಂದಿನ ಸಿಎಂ' ವಾಟಾಳ್ ನಾಗರಾಜ್ ಸ್ಫೋಟಕ ಹೇಳಿಕೆ!]]></title>
            <link>https://kannada.asianetnews.com/karnataka-districts/i-am-the-next-karnataka-cm-vatal-nagaraj-claims-in-belagavi/articleshow-xru6gfc</link>
            <guid isPermaLink="true">https://kannada.asianetnews.com/karnataka-districts/i-am-the-next-karnataka-cm-vatal-nagaraj-claims-in-belagavi/articleshow-xru6gfc</guid>
            <pubDate>Tue, 26 May 2026 13:27:40 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಅಂಗೀಕರಿಸದಿದ್ದರೆ ಕಂಡರಿಯದ ಕ್ರಾಂತಿ ಮಾಡುವುದಾಗಿ ಎಚ್ಚರಿಸಿದ್ದಾರೆ. ಮುಂದಿನ ಬಾರಿ ತಾವೇ ಮುಖ್ಯಮಂತ್ರಿಯಾಗುವುದಾಗಿಯೂ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jn5yp0epwpw5vxn7bxq5hd7g,imgname-vatal-nagaraj-karnataka-bundh.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮೇ.26):&lt;/strong&gt; ಬೆಳಗಾವಿಯ ಇಂದಿನ ಪರಿಸ್ಥಿತಿಗೆ ಇಲ್ಲಿನ ನೀಚ ರಾಜಕಾರಣಿಗಳೇ ಕಾರಣ. ಇವತ್ತು ಬೆಳಗಾವಿಯಲ್ಲಿ ಕನ್ನಡ ಇನ್ನೂ ಉಳಿದಿದ್ದರೆ ಅದಕ್ಕೆ ಕಾರಣ ಕನ್ನಡ ಚಳುವಳಿಗಾರರು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.&lt;/p&gt;&lt;p&gt;ಇಂದು ಬೆಳಗಾವಿಯಲ್ಲಿ ಮಾತನಾಡಿದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಇಂದು 29ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಕೈಜೋಡಿಸಿದ್ದು, ಇಲ್ಲಿಂದಲೇ ಹೊಸ ಕ್ರಾಂತಿ ಆರಂಭವಾಗಲಿದೆ ಎಂದು ಘೋಷಿಸಿದರು. 'ಕನ್ನಡ ಹೆಸರಿನಲ್ಲಿ ಸರ್ಕಾರ ಬರಬೇಕು. ವಿಧಾನಸೌಧದಲ್ಲಿ ಕನ್ನಡಪರ ಸಂಘಟನೆಗಳಿಗೆ ವಿಶೇಷ ಕೊಠಡಿ ಕೊಡಬೇಕು. ವರ್ಷಕ್ಕೆ ಒಂದು ಕೋಟಿ ಅನುದಾನ ಕೊಡಬೇಕು. ಪ್ರೆಸ್ ಕ್ಲಬ್&zwnj;ಗೆ ಐದು ಕೋಟಿ ನೀಡಬೇಕು. ಇವೆಲ್ಲ ಆಗಬೇಕಾದರೆ ನಾನು ಮುಖ್ಯಮಂತ್ರಿ ಆಗಬೇಕು, ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ' ಎಂದು ವಾಟಾಳ್ ಸ್ಫೋಟಕ ಹೇಳಿಕೆ ನೀಡಿದರು.&lt;/p&gt;&lt;h2&gt;ಜೂನ್ 2ರೊಳಗೆ ನಿರ್ಣಯ ಇಲ್ಲದಿದ್ರೆ ಕಂಡರಿಯದ ಕ್ರಾಂತಿ ಆಗುತ್ತೆ&lt;/h2&gt;&lt;p&gt;ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯವನ್ನು ಜೂನ್ 2ರೊಳಗೆ ಅಂಗೀಕರಿಸಬೇಕು ಎಂದು ವಾಟಾಳ್ ಒತ್ತಾಯಿಸಿದರು. ಆ ನಿರ್ಣಯ ಮಾಡದಿದ್ರೆ ಬೆಳಗಾವಿಯಲ್ಲಿ ಕಂಡರಿಯದ ಕ್ರಾಂತಿ ಆಗುತ್ತೆ&rdquo; ಎಂದು ಎಚ್ಚರಿಸಿದರು. ಜೊತೆಗೆ ಜೂನ್ 4ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ ನಡೆಯಲಿದೆ ಎಂದರು. ಆ ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆ ತೀರ್ಮಾನವಾಗಲಿದೆ ಎಂದು ತಿಳಿಸಿದರು.&lt;/p&gt;&lt;h3&gt;ಅಖಂಡ ಕರ್ನಾಟಕ ಬಂದ್&zwnj;ಗೆ ವಾಟಾಳ್ ಸುಳಿವು&lt;/h3&gt;&lt;p&gt;ಜೂನ್ 4ರ ಸಭೆಯ ಬಳಿಕ ಅಖಂಡ ಕರ್ನಾಟಕ ಬಂದ್&zwnj;ಗೆ ಕರೆ ನೀಡುವುದಾಗಿ ವಾಟಾಳ್ ಘೋಷಿಸಿದರು. 'ಬೆಳಗಾವಿಯಿಂದಲೇ ಕರ್ನಾಟಕ ಬಂದ್ ಆರಂಭವಾಗುತ್ತೆ. ಎಲ್ಲ ಕನ್ನಡಪರ ಸಂಘಟನೆಗಳನ್ನೂ ಒಂದಾಗಿಸುತ್ತೇವೆ. ಕರ್ನಾಟಕ ಇತಿಹಾಸದಲ್ಲಿ ಆಗದ ರೀತಿಯ ಹೋರಾಟ ನಡೆಯಲಿದೆ' ಎಂದು ಹೇಳಿದರು. ಬಂದ್ ದಿನ ಬೆಳಗಾವಿಗೆ ಬಂದು ಬೀದಿ ಬೀದಿಯಲ್ಲಿ ಮೆರವಣಿಗೆ ಹಾಗೂ ಹೋರಾಟ ನಡೆಸುವುದಾಗಿ ತಿಳಿಸಿದ ಅವರು, ಸರ್ಕಾರದ ಮೇಲೆ ಭಾರೀ ಒತ್ತಡ ತರುತ್ತೇವೆ ಎಂದರು. ಅದಕ್ಕೂ ಸ್ಪಂದನೆ ಸಿಗದಿದ್ರೆ ಪಾಲಿಕೆಯ ಎಲ್ಲಾ ಸದಸ್ಯರನ್ನ ಮನೆಗೆ ಕಳುಹಿಸಬೇಕು' ಎಂದು ವಾಟಾಳ್ ತೀವ್ರ ಎಚ್ಚರಿಕೆ ನೀಡಿದರು.&lt;/p&gt;]]></content:encoded>
            <category>belagavi</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/i-am-the-next-karnataka-cm-vatal-nagaraj-claims-in-belagavi/articleshow-xru6gfc"/>
        </item>
    </channel>
</rss>
