<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 26 Apr 2026 15:35:31 +0530</lastBuildDate>
        <atom:link href="https://kannada.asianetnews.com/rss/belagavi" rel="self" type="application/rss+xml"/>
        <item>
            <title><![CDATA[ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯ ಬೇಕು: ಸಚಿವ ಸತೀಶ್‌ ಜಾರಕಿಹೊಳಿ]]></title>
            <link>https://kannada.asianetnews.com/karnataka-districts/satish-jarkiholi-dk-shivakumar-meeting-no-politics-statement-gvd/articleshow-2gzxoyg</link>
            <guid isPermaLink="true">https://kannada.asianetnews.com/karnataka-districts/satish-jarkiholi-dk-shivakumar-meeting-no-politics-statement-gvd/articleshow-2gzxoyg</guid>
            <pubDate>Mon, 20 Apr 2026 23:53:29 +0530</pubDate>
            <description><![CDATA[&lt;p&gt;ಚುನಾವಣಾ ಸಂದರ್ಭದಲ್ಲಿ ಅಥವಾ ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಅಥವಾ ಹೊರಹಾಕಿದ್ದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kec3khyg1mjhr8s681z39rvq,imgname-----------------------2026-01-07t165541.766-1767785482192.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.20): &lt;/strong&gt;ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಅದು ಕೇವಲ ಸೌಜನ್ಯದ ಭೇಟಿ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಅಥವಾ ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಅಥವಾ ಹೊರಹಾಕಿದ್ದು ಸರಿಯಲ್ಲ ಎಂಬ ತಮ್ಮ ಅಭಿಪ್ರಾಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ತಿಳಿಸಿದ್ದೇನೆ. ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದು, ನಡೆದಿರುವ ಲೋಪದೋಷಗಳನ್ನು ಗಮನಿಸಿದ್ದೇನೆ.&lt;/p&gt;&lt;p&gt;ಮುಂದಿನ ದಿನಗಳಲ್ಲಿ ಇದನ್ನು ಖಂಡಿತವಾಗಿಯೂ ಸರಿಪಡಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾಗಿ ತಿಳಿಸಿದರು. ಪಕ್ಷವು ಎಲ್ಲ ಸಮುದಾಯಗಳನ್ನು ಒಳಗೊಂಡು ಹೋಗಬೇಕಾದ ಅಗತ್ಯವಿದೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದು, ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಯಾವುದೇ ಮಾಹಿತಿ ಇಲ್ಲ&lt;/strong&gt;&lt;/h2&gt;&lt;p&gt;ಶಾಸಕ ಎನ್.ಎ.ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಘಟನೆಗಳು ಸಹಜವಾಗಿ ನಡೆಯುತ್ತಿರುತ್ತವೆ. ಆದರೆ, ಈ ನಿರ್ದಿಷ್ಟ ದಾಳಿಯ ಬಗ್ಗೆ ತಮಗೆ ತಿಳಿದಿಲ್ಲ. ದಾಳಿ ನಡೆದರೆ ಕಾನೂನು ಹೋರಾಟ ಮಾಡಬೇಕಷ್ಟೇ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಮಹಿಳಾ ಮೀಸಲಾತಿ ಬಿಲ್ ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾಡಿರುವ ಭಾಷಣದ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.&lt;/p&gt;&lt;p&gt;ಮೀಸಲಾತಿ ನೀಡುವ ಪ್ರಾಮಾಣಿಕ ಉದ್ದೇಶ ಸರ್ಕಾರಕ್ಕೆ ಇದ್ದಿದ್ದರೆ, ಕ್ಷೇತ್ರ ಪುನರ್ವಿಂಗಡಣೆ ಮತ್ತು ಜನಗಣತಿ ಕಡ್ಡಾಯಗೊಳಿಸಿರುವುದನ್ನು ಕೈ ಬಿಡಬೇಕಿತ್ತು. ಯಾವುದೇ ಷರತ್ತುಗಳಿಲ್ಲದೆ ತಕ್ಷಣವೇ ಜಾರಿಗೆ ತರಬಹುದಿತ್ತು. ಆದರೆ, ಇವೆರಡನ್ನೂ ಲಿಂಕ್ ಮಾಡಿದ್ದೇ ಬಿಲ್ ಸೋಲಲು ಕಾರಣವಾಗಿದೆ. ಪ್ರಧಾನಿ ಮೋದಿ ಅವರು ಏನು ಭಾಷಣ ಮಾಡಿದರೂ ಈಗ ಜನರಿಗೆ ಅದರ ಹಿಂದಿನ ಸಂಚು ಅರ್ಥವಾಗುತ್ತಿದೆ. ಇದು ಕೇವಲ ಚುನಾವಣೆಗಾಗಿ ಮಾಡಿದ ಗಿಮಿಕ್ ಎಂಬ ನಿಜ ಸಂದೇಶ ಜನರಿಗೆ ತಲುಪಿದೆ ಎಂದು ಹೇಳಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/satish-jarkiholi-dk-shivakumar-meeting-no-politics-statement-gvd/articleshow-2gzxoyg"/>
        </item>
        <item>
            <title><![CDATA[ಒಳ ಮೀಸಲಾತಿ ವಿಚಾರದಲ್ಲಿ ಸಮಾಜ ಒಡೆಯುವ ಯತ್ನ: ಸಚಿವ ಸತೀಶ್ ಜಾರಕಿಹೊಳಿ]]></title>
            <link>https://kannada.asianetnews.com/karnataka-districts/satish-jarkiholi-internal-reservation-controversy-belagavi-gvd/articleshow-5at3yw7</link>
            <guid isPermaLink="true">https://kannada.asianetnews.com/karnataka-districts/satish-jarkiholi-internal-reservation-controversy-belagavi-gvd/articleshow-5at3yw7</guid>
            <pubDate>Wed, 15 Apr 2026 18:20:07 +0530</pubDate>
            <description><![CDATA[&lt;p&gt;ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kfzqhvt5gmj9gqsa57y6s9by,imgname-satish-jarkiholi-1769517674309.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.15): &lt;/strong&gt;ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದರು.&lt;/p&gt;&lt;p&gt;ನಜೀರ್ ಉಚ್ಚಾಟನೆ ಕುರಿತು ಪ್ರತಿಕ್ರಿಯೆ ನೀಡಿ, ಯಾವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇದರ ಬಗ್ಗೆ ವರಿಷ್ಠರು ಸ್ಪಷ್ಟನೆ ನೀಡಬೇಕು. ಯಾರ ಮೇಲಾದರೂ ಕ್ರಮ ಕೈಗೊಳ್ಳುವುದು ವರಿಷ್ಠರ ವಿಚಾರವಾಗಿದ್ದು, ಸರ್ಕಾರವು ಸಾರ್ವಜನಿಕರಿಗೆ ಕಾರಣವನ್ನು ತಿಳಿಸಬೇಕು ಎಂದು ಹೇಳಿದರು.&lt;/p&gt;&lt;p&gt;ಜಬ್ಬಾರ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಆ ಸ್ಥಾನಕ್ಕೆ ಮುಸ್ಲಿಂ ಸಮುದಾಯದವರನ್ನೇ ನೇಮಕ ಮಾಡಬೇಕು. ಬೇರೆ ಯಾರಿಗೂ ಅವಕಾಶ ನೀಡಬಾರದು. ಬೆಳಗಾವಿ ಜಿಲ್ಲೆಗೆ ಈಗಾಗಲೇ ಎರಡು ಸಚಿವ ಸ್ಥಾನಗಳನ್ನು ನೀಡಲಾಗಿದೆ. ಇನ್ನಷ್ಟು ಸ್ಥಾನಗಳ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು, ಮೂರು ಬಾರಿ ಆಯ್ಕೆಯಾದವರು ದೆಹಲಿಗೆ ತೆರಳಿದ್ದಾರೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದರು.&lt;/p&gt;&lt;h2&gt;&lt;strong&gt;ಅಗತ್ಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ&lt;/strong&gt;&lt;/h2&gt;&lt;p&gt;ಸಂಕೇಶ್ವರ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಜನಸಾಮಾನ್ಯರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪ್ರವಾಸಿ ಮಂದಿರದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯಲಿರುವ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಭಕ್ತಾದಿಗಳ ಅನುಕೂಲಕ್ಕಾಗಿ ಪಟ್ಟಣದ ರಸ್ತೆಗಳ ದುರಸ್ತಿ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಸ್ವತಃ ಪರಿಶೀಲನೆ ನಡೆಸುವುದಾಗಿ ಹೇಳಿದರು.&lt;/p&gt;&lt;p&gt;ಅಲ್ಲದೇ, ಸಂಕೇಶ್ವರ-ಗೋಕಾಕ ರಸ್ತೆ ಸುಸ್ಥಿತಿಯಲ್ಲಿದ್ದರೂ ಕೆಶಿಪ್ ಯೋಜನೆಯಡಿ ಅನಗತ್ಯವಾಗಿ ಮರು ಡಾಂಬರೀಕರಣ ಮಾಡಿ ಸರ್ಕಾರದ ಹಣ ಪೋಲು ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಕುರಿತು ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರೇ ತಮ್ಮ ಕ್ಷೇತ್ರಗಳಲ್ಲಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/satish-jarkiholi-internal-reservation-controversy-belagavi-gvd/articleshow-5at3yw7"/>
        </item>
        <item>
            <title><![CDATA[ಎರಡು ಜಿಲ್ಲೆಯ ರೈತರಿಗೆ ಸುಮಾರು 20 ಸಾವಿರ ಹಸು ವಿತರಣೆ ಯೋಜನೆ  ಘೋಷಿಸಿದ ರಾಜ್ಯ ಸರ್ಕಾರ]]></title>
            <link>https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t</link>
            <guid isPermaLink="true">https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t</guid>
            <pubDate>Sun, 26 Apr 2026 06:02:08 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆಯಂದು ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ಪಶು ಸಂಗೋಪನೆ ಸಚಿವರು 2 ಜಿಲ್ಲೆಗಳ ರೈತರಿಗೆ ಶೇ.25ರ ಸಬ್ಸಿಡಿಯೊಂದಿಗೆ 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwmwqz7q9t758y9z0x56x99t,imgname-cows-1748752923894.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಗ್ರಾಮೀಣ ಭಾಗದ ಜನರಿಗೆ ಹೈನುಗಾರಿಕೆ ಆದಾಯದ ಪ್ರಮುಖ ಮೂಲವಾಗಿದ್ದು, ಸರ್ಕಾರದಿಂದ ಈ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.&lt;/p&gt;&lt;p&gt;ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆ ಅಂಗವಾಗಿ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.&amp;nbsp;&lt;/p&gt;&lt;h2&gt;&lt;strong&gt;20 ಸಾವಿರ ಹಸುಗಳನ್ನು ವಿತರಿಸುವ ಯೋಜನೆ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ದಿನಕ್ಕೆ 70-80 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಸರ್ಕಾರದ ಪ್ರೋತ್ಸಾಹದಿಂದ ಇದು 1 ಕೋಟಿಗೂ ಹೆಚ್ಚು ಲೀಟರ್&zwnj;ಗೆ ಏರಿಕೆಯಾಗಿದೆ. ಬಡ ರೈತರಿಗೆ ಹಸು ಖರೀದಿಸಲು ಅನುಕೂಲವಾಗಲು ಶೇ.25 ಸಬ್ಸಿಡಿ ನೀಡಲಾಗಿದ್ದು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಮಾರು 20 ಸಾವಿರ ಹಸುಗಳನ್ನು ವಿತರಿಸುವ ಯೋಜನೆ ಕೈಗೊಳ್ಳಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಲಸಿಕಾ ಕಾರ್ಯಕ್ರಮ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಂದು ಗ್ರಾಮ ಹಾಗೂ ಕುಟುಂಬಕ್ಕೂ ಇದರ ಪ್ರಯೋಜನ ತಲುಪಬೇಕು ಎಂದರು.&lt;/p&gt;&lt;p&gt;ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಹೈನುಗಾರಿಕೆ ಮಹಿಳೆಯರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕು. ಎಲ್ಲ ಜಾನುವಾರುಗಳಿಗೆ ಸೂಕ್ತ ಲಸಿಕೆ ನೀಡುವಂತೆ ಕರೆ ನೀಡಿದರು.&lt;/p&gt;&lt;p&gt;ಅಧ್ಯಕ್ಷತೆ ವಹಿಸಿದ ಶಾಸಕ ಆಸೀಫ್ ಸೇಠ್, ಪಶುಸಂಗೋಪನೆಯನ್ನು ಉತ್ತೇಜಿಸಿ ಜಾನುವಾರುಗಳ ಸಮರ್ಪಕ ಆರೈಕೆ ಮಾಡಬೇಕು ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ಲಸಿಕಾ ಕಾರ್ಯಕ್ರಮ ಯಶಸ್ವಿ&lt;/strong&gt;&lt;/h3&gt;&lt;p&gt;ಪಶುಪಾಲನೆ ಇಲಾಖೆ ಆಯುಕ್ತ ಶಿಲ್ಪಾ ನಾಗ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಾದ್ಯಂತ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.&lt;/p&gt;&lt;p&gt;ಕಾರ್ಯಕ್ರಮದಲ್ಲಿ ಶಾಸಕ ಗಣೇಶ ಹುಕ್ಕೇರಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಉಪ ಮೇಯರ್&zwnj; ಹನುಮಂತ ಕೊಂಗಾಲಿ, ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶಿವಶರಣಪ್ಪ ಯಲಗೋಡ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಪಿ.ಶ್ರೀನಿವಾಸು, ಅಪರ ನಿರ್ದೇಶಕ ಡಾ.ಶಿವರುದ್ರಪ್ಪ, ಕೆ.ಎಲ್.ಅಪರ ನಿರ್ದೇಶಕ ಡಾ.ಪ್ರಸಾದ ಮೂರ್ತಿ, ಪೊಲೀಸ್ ಆಯುಕ್ತ ಭೂಷಣ್ ಬೊರಸೆ, ಜಿಪಂ ಸಿಇಒ ರಾಹುಲ್ ಶಿಂಧೆ, ಜಂಟಿ ನಿರ್ದೇಶಕ ಡಾ.ಹೆಚ್.ನಾಗರಾಜ್, ಬೆಳಗಾವಿ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಕಾಂತ.ವಿ.ಎನ್, ಅಧಿಕಾರಿಗಳು ಉಪಸ್ಥಿತರಿದ್ದರು&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/government-has-announced-a-scheme-to-distribute-about-20000-cows-to-farmers-in-belagavi-kalaburgi-mrq/articleshow-6cnz45t"/>
        </item>
        <item>
            <title><![CDATA[ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿ ಆ*ತ್ಮಹ*ತ್ಯೆ; ಪತಿ ಅರೆಸ್ಟ್]]></title>
            <link>https://kannada.asianetnews.com/belagavi/belagavi-woman-ends-life-dowry-harassment-husband-arrested-apmc-police-san/articleshow-6npnz7t</link>
            <guid isPermaLink="true">https://kannada.asianetnews.com/belagavi/belagavi-woman-ends-life-dowry-harassment-husband-arrested-apmc-police-san/articleshow-6npnz7t</guid>
            <pubDate>Mon, 20 Apr 2026 09:31:41 +0530</pubDate>
            <description><![CDATA[&lt;p&gt;ಬೆಳಗಾವಿಯ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಶ್ರೀನಿಧಿ (28) ಎಂಬ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಮೃತಳ ಪೋಷಕರ ದೂರಿನ ಮೇರೆಗೆ ಪತಿ ಸಂತೋಷ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpmftq65081xb2twpwcgaedx,imgname-belagavi-death-1776656669893.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.20):&lt;/strong&gt; ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಗರದ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ ನಾವಿ (28) ಆ*ತ್ಮಹ*ತ್ಯೆಗೆ ಶರಣಾದ ದುರ್ದೈವಿ. 2021ರಲ್ಲಿ ಸಂತೋಷ ಎಂಬಾತನೊಂದಿಗೆ ಶ್ರೀನಿಧಿ ಅವರ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿರಬೇಕಾಗಿದ್ದ ಸಂಸಾರದಲ್ಲಿ ವರದಕ್ಷಿಣೆ ವಿಷಯವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಪತಿ ಸಂತೋಷ್, ಶ್ರೀನಿಧಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಲ್ಲದೆ, ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಆಕೆಯ ಮೊಬೈಲ್ ಫೋನನ್ನೂ ಕಿತ್ತುಕೊಂಡಿದ್ದ ಎಂದು ಆರೋಪಿಸಲಾಗಿದೆ.&lt;/p&gt;&lt;p&gt;ಶನಿವಾರ ಮನೆಯ ಮೊದಲ ಮಹಡಿಯಲ್ಲಿ ಕಿಟಕಿ ಗ್ರೀಲ್&zwnj;ಗೆ ವೇಲ್&zwnj;ನಿಂದ ನೇಣು ಬಿಗಿದುಕೊಂಡು ಶ್ರೀನಿಧಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪತಿ, ಅತ್ತೆ ಹಾಗೂ ಇನ್ನಿಬ್ಬರು ಸಂಬಂಧಿಕರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸರು ಪತಿ ಸಂತೋಷ್&zwnj;ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>belagavi</category>
            <dc:creator>Santosh Naik</dc:creator>
            <atom:link href="https://kannada.asianetnews.com/belagavi/belagavi-woman-ends-life-dowry-harassment-husband-arrested-apmc-police-san/articleshow-6npnz7t"/>
        </item>
        <item>
            <title><![CDATA[ನದಿಯಲ್ಲಿ ಮುಳುಗಿ ತಾಯಿ ಮಗು  ಸಾವು : ಮುಳುಗುತ್ತಿದ್ದ ಮಗನ ರಕ್ಷಿಸಲು ಹೋದಾಗ ದುರಂತ]]></title>
            <link>https://kannada.asianetnews.com/state/mother-and-child-drown-to-death-while-trying-to-save-son/articleshow-9dx3vhm</link>
            <guid isPermaLink="true">https://kannada.asianetnews.com/state/mother-and-child-drown-to-death-while-trying-to-save-son/articleshow-9dx3vhm</guid>
            <pubDate>Wed, 22 Apr 2026 14:31:16 +0530</pubDate>
            <description><![CDATA[&lt;p&gt;ಬೆಳಗಾವಿ ಜಿಲ್ಲೆಯ ಸಂಕೇಶ್ವರದ, ಹಿರಣ್ಯಕೇಶಿ ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ನೀರುಪಾಲಾಗಿದ್ದಾರೆ. ಈ ದುರಂತದಲ್ಲಿ ತಾಯಿ ಲಕ್ಷ್ಮಿ ಹಾಗೂ ಮಗ ಸುಪ್ರೀತ್ ಮೃತಪಟ್ಟಿದ್ದು, ತಾಯಿಯ ಮೃತದೇಹ ಪತ್ತೆಯಾಗಿದೆ ಮಗನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpt6230rwzv5fg1dg4dwpaz8,imgname-woman-and-baby-died-1776847752215.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ನದಿಯಲ್ಲಿ ಮುಳುಗಿ ತಾಯಿ ಮಗು ಸಾವು&lt;/strong&gt;&lt;/h2&gt;&lt;p&gt;ಚಿಕ್ಕೋಡಿ: ನದಿಯಲ್ಲಿ ಮುಳುಗಿ ತಾಯಿ ಮಗ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ. ನಿನ್ನೆ ಈ ದುರಂತ ನಡೆದಿದೆ. ನಿನ್ನೆ ತಾಯಿ ಮೃತದೇಹ ಪತ್ತೆಯಾಗಿದ್ದು, ಮಗನಿಗಾಗಿ ಹುಡುಕಾಟ ನಡೆದಿದೆ. ಸಾವನ್ನಪ್ಪಿದ ತಾಯಿ ಮಗನನ್ನು ತಾಯಿ 27 ವರ್ಷದ ಲಕ್ಷ್ಮಿ ಕುಠೋಳಿ ಹಾಗೂ 10 ವರ್ಷದ ಸುಪ್ರೀತ್ ಕುಠೋಳಿ ಎಂದು ಗುರುತಿಸಲಾಗಿದೆ.&lt;/p&gt;&lt;h3&gt;&lt;strong&gt;ಮುಳುಗುತ್ತಿದ್ದ ಮಗನ ರಕ್ಷಿಸಲು ಹೋಗಿ ತಾಯಿಯೂ ಬಲಿ:&lt;/strong&gt;&lt;/h3&gt;&lt;p&gt;ಸಂಕೇಶ್ವರ ಪಟ್ಟಣದ ಹಿರಣ್ಯಕೇಶಿ ನದಿಯಲ್ಲಿ ಈ ದುರಂತ ನಡೆದಿದೆ. ನಿನ್ನೆ ತಾಯಿ ಮೃತದೇಹ ಪತ್ತೆಯಾಗಿದ್ದು, ಮಗನಿಗಾಗಿ ಹುಡುಕಾಟ ಮುಂದುವರೆದಿದೆ. ಸಂಕೇಶ್ವರದ ಶಂಕಲಿಂಗ ದೇವಸ್ಥಾನದ ಹಿಂಭಾಗದ ಹಿರಣ್ಯಕೇಶಿ ನದಿಯಲ್ಲಿ ಈ ದುರಂತ ನಡೆದಿತ್ತು. ಮಗ ಸುಪ್ರೀತ್ ನದಿಯಲ್ಲಿ ಇಳಿದಾಗ ಮುಳುಗಲಾರಂಭಿಸಿದ್ದು, ಮಗನನ್ನ ರಕ್ಷಣೆ ಮಾಡಲು ಹೋಗಿ ತಾಯಿಯೂ ನೀರುಪಾಲಾಗಿದ್ದಾರೆ.&lt;/p&gt;&lt;p&gt;ನಿನ್ನೆ ರಾತ್ರಿಯೇ ತಾಯಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗಡೆ ತೆಗೆದಿದ್ದು, ಮಗ ಸುಪ್ರಿತ್&zwnj;ಗಾಗಿ ಬೋಟ್&zwnj;ನಲ್ಲಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.&lt;strong&gt;ಇದನ್ನೂ ಓದಿ: &lt;/strong&gt;ಚಿಕ್ಕಮಗಳೂರು: ಕಾಡಾನೆಗಳ ಬಳಿಕ ಕಾಡುಕೋಣಗಳ ವೈಲ್ಡ್ ರೈಡ್: ಟೀ ಎಸ್ಟೇಟ್&zwnj;ನಲ್ಲಿ ದಾಂಧಲೆ: 1 ಕಾಟಿ ಸಾವು&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/state/mother-and-child-drown-to-death-while-trying-to-save-son/articleshow-9dx3vhm"/>
        </item>
        <item>
            <title><![CDATA[Karnataka Politics: ತಂದೆ ಸಿಎಂ ಇರುವಾಗ ನಾ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸ್ಪಷ್ಟನೆ]]></title>
            <link>https://kannada.asianetnews.com/politics/i-am-not-an-aspirant-for-a-ministerial-post-while-my-father-is-the-chief-minister-says-yathindra-siddaramaiah-rav/articleshow-awfhtxg</link>
            <guid isPermaLink="true">https://kannada.asianetnews.com/politics/i-am-not-an-aspirant-for-a-ministerial-post-while-my-father-is-the-chief-minister-says-yathindra-siddaramaiah-rav/articleshow-awfhtxg</guid>
            <pubDate>Fri, 17 Apr 2026 05:42:27 +0530</pubDate>
            <description><![CDATA[ತಮ್ಮ ತಂದೆ ಮುಖ್ಯಮಂತ್ರಿಯಾಗಿರುವವರೆಗೆ ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಿರಿಯರಿಗೆ ಅವಕಾಶ ಸಿಗಬೇಕು ಎಂದಿರುವ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ಸಹಜ ಎಂದು ಬೈಲಹೊಂಗಲದಲ್ಲಿ ಹೇಳಿಕೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ht74ayq8tthetz5ddx7kgs7n,imgname-Screenshot-2024-03-30-130111-1711783901928.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೈಲಹೊಂಗಲ (ಏ.17):&lt;/strong&gt; ನಮ್ಮ ತಂದೆ ಮುಖ್ಯಮಂತ್ರಿ ಇರುವವರೆಗೆ ಸಚಿವ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಹಿರಿಯರು ಹಾಗೂ ಅನುಭವಿಗಳಿಗೆ ಅವಕಾಶ ಸಿಗಬೇಕು ಎಂದು ವಿಧಾನ ಪರಿಷತ್&zwnj; ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.&lt;/p&gt;&lt;p&gt;ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ಶಾಸಕರು ಸಚಿವ ಸ್ಥಾನ ಕೇಳುವುದು ಸಹಜ. ಯಾವುದೇ ಸಚಿವ ಸಂಪುಟದಲ್ಲಿ ಹೊಸಬರು ಹಾಗೂ ಅನುಭವಿಗಳಿರುತ್ತಾರೆ ಎಂದರು. ತಮ್ಮ ತಂದೆ ಮುಂದಿನ ಐದು ವರ್ಷ ರಾಜ್ಯವನ್ನು ಮುನ್ನಡೆಸಲಿ ಎಂಬುದು ನನ್ನ ವೈಯಕ್ತಿಕ ಆಶಯ ಮಾತ್ರ. ಐದು ವರ್ಷ ಆಡಳಿತದ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಹಜ. ರಾಜ್ಯದ ಜನರಿಗೆ ಒಳ್ಳೆಯದಾಗುವುದೇ ಮುಖ್ಯ ಎಂದು ಹೇಳಿದರು.&lt;/p&gt;&lt;p&gt;136 ಶಾಸಕರಿದ್ದರೂ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲ ಸರ್ಕಾರಗಳಲ್ಲಿಯೂ ಇಂತಹ ಚರ್ಚೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರದಲ್ಲಿಯೂ ಮುಖ್ಯಮಂತ್ರಿಗಳ ಬದಲಾವಣೆ ನಡೆದಿತ್ತು. ಎಲ್ಲ ಪಕ್ಷಗಳಲ್ಲಿಯೂ ಸಿಎಂ ಆಕಾಂಕ್ಷಿಗಳು ಇರುವುದು ಸಾಮಾನ್ಯ ಎಂದರು. ಬಾಗಲಕೋಟೆ ಹಾಗೂ ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/i-am-not-an-aspirant-for-a-ministerial-post-while-my-father-is-the-chief-minister-says-yathindra-siddaramaiah-rav/articleshow-awfhtxg"/>
        </item>
        <item>
            <title><![CDATA[ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಇಬ್ಬರೂ ಸ್ಥಳದಲ್ಲೇ ಸಾವು, ನೂರಾರು ಕೋಳಿಗಳ ಮಾರಣಹೋಮ]]></title>
            <link>https://kannada.asianetnews.com/gallery/state/belagavi-accident-news-goods-vehicle-collides-with-parked-truck-two-died-on-spot-azf9exv</link>
            <guid isPermaLink="true">https://kannada.asianetnews.com/gallery/state/belagavi-accident-news-goods-vehicle-collides-with-parked-truck-two-died-on-spot-azf9exv</guid>
            <pubDate>Tue, 21 Apr 2026 10:10:50 +0530</pubDate>
            <description><![CDATA[&lt;p&gt;ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್&zwnj;ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಮೃತಪಟ್ಟಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpq2fb4psaq7h7fky5z8n7mm,imgname-belagavi-accident--6--1776743328918.jpeg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್&zwnj;ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಹ ಮೃತಪಟ್ಟಿವೆ.&lt;/p&gt;&lt;img&gt;&lt;p&gt;ಬೆಳಗಾವಿ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಟ್ರಕ್&zwnj;ಗೆ ಕೋಳಿ ಸಾಗಾಣಿಕೆ ಮಾಡ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಈ ದುರಂತ ಸಂಭವಿಸಿದೆ.&lt;/p&gt;&lt;img&gt;&lt;p&gt;ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿದ್ದ ಚಾಲಕ ನಿಯಂತ್ರಣ ತಪ್ಪಿ ಟ್ರಕ್&zwnj;ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.&lt;/p&gt;&lt;img&gt;&lt;p&gt;ಅಪಘಾತದ ರಭಸಕ್ಕೆ ಚಾಲಕನ ಪಕ್ಕದಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದರೆ, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದಿಂದಾಗಿ ವಾಹನವೂ ನಜ್ಜುಗುಜ್ಜಾಗಿದ್ದು, ವಾಹನದೊಳಗಿನಿಂದ ಗಾಯಾಳು ಹಾಗೂ ಮೃತಪಟ್ಟವರನ್ನು ಹೊರತೆಗೆದು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.&lt;/p&gt;&lt;img&gt;&lt;p&gt;ಅಪಘಾತಕ್ಕೀಡಾದ ಈ ಗೂಡ್ಸ್ ಗಾಡಿ ಕೊಲ್ಲಾಪುರದಿಂದ ಶಿವಮೊಗ್ಗದ ಸೊರಬಕ್ಕೆ ಹೋಗ್ತಿತ್ತು. ಕೋಳಿ ತುಂಬಿಸಿಕೊಂಡು ಹೋಗುತ್ತಿದ್ದ ಈ ಲಾರಿ ಡಿಕ್ಕಿ ಹೊಡೆದ ಪರಿಣಾಮ ನೂರಾರು ಕೋಳಿಗಳು ಕೂಡ ಸಾವನ್ನಪ್ಪಿವೆ.&lt;/p&gt;&lt;img&gt;&lt;p&gt;ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ವಾಸೀಂ, ಶಿವಮೊಗ್ಗದ ಕುಕ್ಕಪೇಟೆ ನಿವಾಸಿ ಮುಬಾರಕ್ ಎಂದು ಗುರುತಿಸಲಾಗಿದ್ದು, ಗಾಯಾಳು ಚಾಲಕನನ್ನು ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ಈರಪ್ಪ ಹಂಚಿನಮನಿ ಎಂದು ಗುರುತಿಸಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/belagavi-accident-news-goods-vehicle-collides-with-parked-truck-two-died-on-spot-azf9exv"/>
        </item>
        <item>
            <title><![CDATA[ಕಾನೂನು ಸುವ್ಯವಸ್ಥೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲು: ಗೃಹ ಸಚಿವ ಪರಮೇಶ್ವರ್]]></title>
            <link>https://kannada.asianetnews.com/karnataka-districts/karnataka-police-top-ranking-law-order-dr-g-parameshwar-belagavi-gvd/articleshow-cfiqivq</link>
            <guid isPermaLink="true">https://kannada.asianetnews.com/karnataka-districts/karnataka-police-top-ranking-law-order-dr-g-parameshwar-belagavi-gvd/articleshow-cfiqivq</guid>
            <pubDate>Sat, 18 Apr 2026 18:11:41 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ನ್ಯಾಯ ವಿತರಣೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಪೊಲೀಸ್ ವಸತಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4xhfwvwx123bnzfr5ztfa93,imgname-----------------------2025-09-12t045335.769-1757633049467.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.18): &lt;/strong&gt;ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ನ್ಯಾಯ ವಿತರಣೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಸಿಟಿ ಲೇನ್ ಪೊಲೀಸ್ ಕ್ವಾರ್ಟರ್ಸ್ ಆವರಣದಲ್ಲಿ ಪೊಲೀಸ್ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಂತಿ-ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರ ಕುಟುಂಬಗಳಿಗೆ ಸುರಕ್ಷಿತ ಹಾಗೂ ಸುಸಜ್ಜಿತ ವಸತಿ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.&lt;/p&gt;&lt;p&gt;ಬೆಳಗಾವಿ ಜಿಲ್ಲೆಯ ಗೋಕಾಕ, ಕಿತ್ತೂರು, ಕುಲಗೋಡ, ಸಂಕೇಶ್ವರ, ಚಿಕ್ಕೋಡಿ ಸೇರಿದಂತೆ ವಿವಿಧೆಡೆ ₹67.79 ಕೋಟಿ ವೆಚ್ಚದಲ್ಲಿ ಪೊಲೀಸ್ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳು ನಡೆಯುತ್ತಿವೆ. ಶಹಾಪುರದಲ್ಲಿ ₹3.92 ಕೋಟಿ ವೆಚ್ಚದಲ್ಲಿ ವಸತಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಪ್ರತಿ ಮನೆಗೆ ₹38 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಕಳೆದ ವರ್ಷ ₹2000 ಕೋಟಿ ಹಾಗೂ ಈ ವರ್ಷ ₹350 ಕೋಟಿ ವೆಚ್ಚದಲ್ಲಿ ಪೊಲೀಸ್ ವಸತಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಕಾನೂನು ರಕ್ಷಣೆ ಮಾಡುವ ದೃಷ್ಟಿಯಿಂದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಗೆ ಸೌಕರ್ಯ ಒದಗಿಸಲು ಸರ್ಕಾರ ಸ್ಪಂದಿಸಿದೆ. ಪೊಲೀಸ್ ಸಿಬ್ಬಂದಿಗೆ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಜನಸೇವೆಗೆ ತಕ್ಷಣ ಸ್ಪಂದಿಸಬೇಕು ಎಂದು ಕರೆ ನೀಡಿದರು. ದುಶ್ಚಟಗಳಿಂದ ಯುವ ಸಮುದಾಯವನ್ನು ರಕ್ಷಿಸಲು ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತು ಸೇವನೆ ಕುರಿತು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ತಂತ್ರಜ್ಞಾನ ಬಳಕೆಯಿಂದ ಅಂತಹ ಪ್ರಕರಣಗಳನ್ನು ಪತ್ತೆಮಾಡಿ ವಂಚಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.&lt;/p&gt;&lt;h2&gt;&lt;strong&gt;ಅಕ್ಕ ಕೆಫೆ ನಿರ್ಮಾಣ&lt;/strong&gt;&lt;/h2&gt;&lt;p&gt;ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ, ಪೊಲೀಸ್ ಸಿಬ್ಬಂದಿ ನಿರಂತರ 24 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಹಬ್ಬಗಳು ಬಂದರೆ ರಜೆ ಸಿಗುವುದಿಲ್ಲ. ಸಮಾಜದ ರಕ್ಷಣೆಗೆ ಬಿಡುವಿಲ್ಲದೆ ಶ್ರಮಿಸುತ್ತಾರೆ. ಅವರ ಕುಟುಂಬಗಳ ಅನುಕೂಲಕ್ಕಾಗಿ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು. ಪ್ರಾಸ್ತಾವಿಕವಾಗಿ ನಗರ ಪೊಲೀಸ್ ಆಯುಕ್ತ ಭೊರಸೆ ಭೂಷಣ್ ಗುಲಾಬರಾವ್ ಮಾತನಾಡಿ, ಪೊಲೀಸ್ ಸಿಬ್ಬಂದಿಗಳ ಅನುಕೂಲಕ್ಕಾಗಿ ಮತ್ತು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬರುವವರಿಗೆ ಜಿಪಂನಿಂದ ಸಿಟಿ ಲೇನ್&zwnj;ನಲ್ಲಿ ಅಕ್ಕ ಕೆಫೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ.ಕೆ.ಎಂ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ, ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ.ಚೇತನ್ ಸಿಂಗ್ ರಾಠೋಡ್&zwnj;, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಪಂ ಸಿಇಒ ರಾಹುಲ್ ಶಿಂಧೆ, ಡಿಸಿಪಿ ನಾರಾಯಣ ಭರಮನಿ ಸೇರಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.&lt;/p&gt;&lt;p&gt;ರಾಜ್ಯದಲ್ಲಿ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ಕಾಪಾಡುತ್ತಿದೆ. ಇತರೆ ರಾಜ್ಯಗಳಿಂದ ಬಂಡವಾಳ ಹೂಡಿಕೆದಾರರು ಬರುತ್ತಾರೆ. ಇದರಿಂದ ರಾಜ್ಯಕ್ಕೆ ಆದಾಯ ಮತ್ತು ಉದ್ಯೋಗವಕಾಶಗಳು ದೊರೆಯುತ್ತಿವೆ. ನಮ್ಮ ಸರ್ಕಾರ ಬಂದ ನಂತರ ಕೋಮು ಗಲಭೆಗಳಿಗೆ ಕಡಿವಾಣ ಹಾಕಿದ್ದು, ರಾಜ್ಯದಲ್ಲಿ ಕೋಮುಗಲಭೆ ನಡೆದಿಲ್ಲ. ನಡೆಯಲೂ ಬಿಡುವುದಿಲ್ಲ. ಯುವಕರಿಗೆ ಮಾದಕ ವಸ್ತುಗಳ ಹಂಚಿಕೆ ಹಾಗೂ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಕಂಡು ಬರುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು.- ಜಿ.ಪರಮೇಶ್ವರ್, ಗೃಹ ಸಚಿವ&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-police-top-ranking-law-order-dr-g-parameshwar-belagavi-gvd/articleshow-cfiqivq"/>
        </item>
        <item>
            <title><![CDATA[ಬೆಳಗಾವಿಯಲ್ಲಿ ತಲೆ ಎತ್ತಲಿದೆ ತಿರುಪತಿ ದೇಗುಲ: ಜಿರ್ಣೋದ್ಧಾರಕ್ಕೆ 9 ಸಾವಿರ ಕೋಟಿ ಮೀಸಲಿಟ್ಟ ಟಿಟಿಡಿ]]></title>
            <link>https://kannada.asianetnews.com/gallery/astrology/ttd-plans-rs-100cr-venkateshwara-temple-in-belagavi-suh-gcnd7eu</link>
            <guid isPermaLink="true">https://kannada.asianetnews.com/gallery/astrology/ttd-plans-rs-100cr-venkateshwara-temple-in-belagavi-suh-gcnd7eu</guid>
            <pubDate>Thu, 23 Apr 2026 15:40:46 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಭಕ್ತರಿಗಾಗಿ Tirumala Tirupati Devasthanams ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಿಸಲು ಅನುಮೋದನೆ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kdj5k803q89cevwdjvhdhdc3,imgname-tirupati-balaji-mandir-1766915153923.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಭಕ್ತರಿಗಾಗಿ Tirumala Tirupati Devasthanams ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಿಸಲು ಅನುಮೋದನೆ ನೀಡಿದೆ.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರದ ಭಕ್ತರ ಸೌಲಭ್ಯಕ್ಕಾಗಿ ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ತಿರುಮಲ ತಿರುಪತಿ ದೇವಸ್ಥಾನ (TTD) ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಈ ದೇವಸ್ಥಾನವನ್ನು ಸುಮಾರು ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದೆ.&lt;/p&gt;&lt;img&gt;&lt;p&gt;ಸುವರ್ಣ ವಿಧಾನ ಸೌಧದ ಸಮೀಪ ಸುಮಾರು 7 ಏಕರೆ ಜಾಗದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದ್ದು, ಈ ಜಾಗವನ್ನು ಸ್ಥಳೀಯ ರೆಡ್ಡಿ ಸಂಘ ದಾನವಾಗಿ ನೀಡಿದೆ. ದೇವಸ್ಥಾನ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದ್ದು, ಸುಮಾರು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;&lt;img&gt;&lt;p&gt;ಈ ಯೋಜನೆಗೆ ಟಿಟಿಡಿ 80% ಹಣವನ್ನು ಒದಗಿಸಲಿದ್ದು, ಉಳಿದ 20% ಹಣವನ್ನು ರೆಡ್ಡಿ ಸಂಘ ಮತ್ತು ಸಾರ್ವಜನಿಕ ದೇಣಿಗೆಗಳಿಂದ ಸಂಗ್ರಹಿಸಲಾಗುತ್ತದೆ.&lt;/p&gt;&lt;p&gt;ಟಿಟಿಡಿ ಸದಸ್ಯ ಎಸ್&zwnj;. ನರೇಶ್ ಕುಮಾರ್ ಅವರ ಪ್ರಕಾರ, ಬೆಳಗಾವಿಯ ಭೌಗೋಳಿಕ ಸ್ಥಾನಮಾನವನ್ನು ಗಮನಿಸಿದರೆ, ಈ ದೇವಸ್ಥಾನ ಉತ್ತರ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೆ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಲಿದೆ.&lt;/p&gt;&lt;img&gt;&lt;p&gt;ಈ ದೇವಸ್ಥಾನವು ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ವಸತಿ ವ್ಯವಸ್ಥೆ, ಪ್ರಸಾದ ವಿತರಣೆ ಹಾಗೂ ಉಚಿತ ಅನ್ನದಾನ ವ್ಯವಸ್ಥೆಯನ್ನೂ ಒಳಗೊಂಡಿರುತ್ತದೆ.&lt;/p&gt;&lt;p&gt;ಹೊಸ ದೇವಾಲಯ ನಿರ್ಮಾಣ ಹಾಗೂ ದೇವಾಲಯಗಳ ಜಿರ್ಣೋದಾರಕ್ಕಾಗಿ 9 ಸಾವಿರ ಕೋಟಿ ಹಣ ಟಿಟಿಡಿ ಮೀಸಲು ಇಟ್ಟಿದೆ. ಬೆಳಗಾವಿ ಅಷ್ಟೇ ಅಲ್ಲದೇ ದೇಶದ ಆರು ಕಡೆಗಳಲ್ಲಿ ಹೊಸ ವೆಂಕಟೇಶ್ವರನ ದೇವಾಲಯಗಳು ನಿರ್ಮಾಣಕ್ಕೆ ಟಿಟಿಡಿ ಮುಂದಾಗಿದೆ. ಒಟ್ಟಾರೆಯಾಗಿ ದೇವಾಲಯ ನಿರ್ಮಾಣದಿಂದ ಬೆಳಗಾವಿ ಶೈಕ್ಷಣಿಕ, ಸಾಮಾಜಿಕವಾಗಿ ಅಷ್ಟೇ ಅಲ್ಲದೇ ಧಾರ್ಮಿಕವಾಗಿ ಗುರುತಿಸುವಂತೆ ಆಗಲಿದೆ. ಶೀಘ್ರದಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ಸಹ ನಡೆಯಲಿದೆ ಎಂದು ಟಿಟಿಡಿ ತಿಳಿಸಿದೆ.&lt;/p&gt;]]></content:encoded>
            <category>belagavi</category>
            <dc:creator>Sushma Hegde</dc:creator>
            <atom:link href="https://kannada.asianetnews.com/gallery/astrology/ttd-plans-rs-100cr-venkateshwara-temple-in-belagavi-suh-gcnd7eu"/>
        </item>
        <item>
            <title><![CDATA[ಒಳಮೀಸಲಾತಿ ಘೋಷಣೆ ಐತಿಹಾಸಿಕ ನಿರ್ಧಾರ: ಸಚಿವ ಸತೀಶ್ ಜಾರಕಿಹೊಳಿ]]></title>
            <link>https://kannada.asianetnews.com/karnataka-districts/satish-jarkiholi-internal-reservation-karnataka-historic-decision-gvd/articleshow-ged41ra</link>
            <guid isPermaLink="true">https://kannada.asianetnews.com/karnataka-districts/satish-jarkiholi-internal-reservation-karnataka-historic-decision-gvd/articleshow-ged41ra</guid>
            <pubDate>Sat, 25 Apr 2026 21:17:38 +0530</pubDate>
            <description><![CDATA[&lt;p&gt;ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ದಶಕಗಳ ಬೇಡಿಕೆ ಒಳಮೀಸಲಾತಿ ಘೋಷಿಸಿರುವುದು ಐತಿಹಾಸಿಕ ನಿರ್ಧಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹೈಕಮಾಂಡ್ ಶೀಘ್ರದಲ್ಲೇ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7ks415c0bec5bxdck4jh9j9,imgname----------------------19--1760526730412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.25): &lt;/strong&gt;ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ದಶಕಗಳ ಬೇಡಿಕೆ ಒಳಮೀಸಲಾತಿ ಘೋಷಿಸಿರುವುದು ಐತಿಹಾಸಿಕ ನಿರ್ಧಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರ, ಸಮುದಾಯದ ಸಚಿವರ ಸಮ್ಮುಖದಲ್ಲಿಯೇ ಒಳ ಮೀಸಲಾತಿ ಘೋಷಿಸಿದ್ದೇವೆ. ಎಲ್ಲಾ ಸಮುದಾಯದವರು ಖುಷಿ ವ್ಯಕ್ತಪಡಿಸಿದ್ದು, ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.&lt;/p&gt;&lt;p&gt;ಒಳಮೀಸಲಾತಿ ಹಂಚಿಕೆ ಬಗ್ಗೆ ಬಿಜೆಪಿ ವಿರೋಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷಗಳು ಸರ್ಕಾರದ ಪ್ರತಿಯೊಂದು ನಿರ್ಧಾರದಲ್ಲೂ ದೋಷ ಹುಡುಕುವುದು ಸಹಜ. ಆದರೆ, ಜನಹಿತಕ್ಕಾಗಿ ತೆಗೆದುಕೊಂಡ ನಿರ್ಧಾರಕ್ಕೆ ಜನರ ಬೆಂಬಲವಿದೆ ಎಂಬುದು ಸರ್ಕಾರದ ನಿಲುವು. ಆದರೆ, ವಿರೋಧ ಪಕ್ಷದವರು ತಮ್ಮ ಅಸ್ತಿತ್ವಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆಂದು ತಿರುಗೇಟು ನೀಡಿದರು.&lt;/p&gt;&lt;h2&gt;&lt;strong&gt;ಶೀಘ್ರದಲ್ಲೇ ತೆರೆ&lt;/strong&gt;&lt;/h2&gt;&lt;p&gt;ಕಾಂಗ್ರೆಸ್ ಪಕ್ಷದ ಒಳಗಿನ ನಾಯಕತ್ವ ಗೊಂದಲದ ಬಗ್ಗೆ ಉತ್ತರಿಸಿದ ಅವರು, ಪಕ್ಷದೊಳಗಿನ ಗೊಂದಲಗಳಿಗೆ ಹೈಕಮಾಂಡ್ ಶೀಘ್ರದಲ್ಲೇ ತೆರೆ ಎಳೆಯಲಿದೆ. ಹೈಕಮಾಂಡ್ ಈಗಾಗಲೇ ಒಂದು ತೀರ್ಮಾನಕ್ಕೆ ಬಂದಿದ್ದು, ಸೂಕ್ತ ಸಮಯದಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದರು.&lt;/p&gt;&lt;p&gt;ಡಿಕೆಶಿ ದೆಹಲಿಗೆ ಹೋಗುವುದು ಹೊಸದಲ್ಲ. ಅವರು ಎರಡು ಪ್ರಮುಖ ಖಾತೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ರಾಜ್ಯದ ಅಭಿವೃದ್ಧಿ ಕೆಲಸಗಳು, ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ಹೋಗುವುದು ಸಹಜ. ದೆಹಲಿ ಭೇಟಿಯನ್ನೇ ನಾಯಕತ್ವ ಬದಲಾವಣೆಯ ಸೂಚನೆ ಎಂದು ಅರ್ಥೈಸುವುದು ಸರಿಯಲ್ಲ. ಪ್ರತಿ ಭೇಟಿಗೂ ರಾಜಕೀಯ ಉದ್ದೇಶ ಕಲ್ಪಿಸಬಾರದು ಎಂದು ತಿಳಿಸಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/satish-jarkiholi-internal-reservation-karnataka-historic-decision-gvd/articleshow-ged41ra"/>
        </item>
        <item>
            <title><![CDATA[ವಿಶ್ವಮಾನವ ಎಕ್ಸ್ ಪ್ರೆಸ್ ಗೆ ಎಲ್ಎಚ್ ಬಿ ಬೋಗಿಗಳ ಅಳವಡಿಕೆ, ಪ್ರಯಾಣಿಕರ ಹೊಸ ಪಯಣದ ರಹಸ್ಯ!]]></title>
            <link>https://kannada.asianetnews.com/karnataka-districts/indian-railways-mysuru-belagavi-vishwamanava-express-upgraded-with-modern-lhb-coaches-from-april-26-gdp/articleshow-hk8bisv</link>
            <guid isPermaLink="true">https://kannada.asianetnews.com/karnataka-districts/indian-railways-mysuru-belagavi-vishwamanava-express-upgraded-with-modern-lhb-coaches-from-april-26-gdp/articleshow-hk8bisv</guid>
            <pubDate>Sat, 18 Apr 2026 17:18:38 +0530</pubDate>
            <description><![CDATA[ಮೈಸೂರು-ಬೆಳಗಾವಿ ವಿಶ್ವಮಾನವ ಸೂಪರ್ ಫಾಸ್ಟ್ ಎಕ್ಸ್&zwnj;ಪ್ರೆಸ್ ರೈಲಿನ ಹಳೆಯ ಐಸಿಎಫ್ ಬೋಗಿಗಳನ್ನು ಆಧುನಿಕ, ಹೆಚ್ಚು ಸುರಕ್ಷಿತವಾದ ಎಲ್ಎಚ್&zwnj;ಬಿ ಬೋಗಿಗಳಾಗಿ ಬದಲಾಯಿಸಲಾಗುತ್ತಿದೆ. ಏಪ್ರಿಲ್ 26 ರಿಂದ ಜಾರಿಗೆ ಬರುವ ಈ ಹೊಸ ವ್ಯವಸ್ಥೆಯು 20 ಬೋಗಿಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಸುಧಾರಿತ ಪ್ರಯಾಣದ ಅನುಭವವನ್ನು ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kg1azs2nd8c37cnyeb1p0x7y,imgname-indian-railways--3--1769571607637.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೈಸೂರು: &lt;/strong&gt;ದಕ್ಷಿಣ ಪಶ್ಚಿಮ ರೈಲ್ವೆ ವತಿಯಿಂದ ಮೈಸೂರು&ndash;ಬೆಳಗಾವಿ&ndash;ಮೈಸೂರು ವಿಶ್ವಮಾನವ ಸೂಪರ್ ಫಾಸ್ಟ್ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ 20676/20675) ರೈಲಿನಲ್ಲಿ ಮಹತ್ವದ ಪರಿಷ್ಕರಣೆ ಕೈಗೊಳ್ಳಲಾಗಿದೆ. ಪ್ರಸ್ತುತ ಬಳಸಲಾಗುತ್ತಿದ್ದ ಹಳೆಯ ಐಸಿಎಫ್ (ICF) ಬೋಗಿಗಳನ್ನು ಹಂತ ಹಂತವಾಗಿ ಆಧುನಿಕ ಎಲ್ಎಚ್&zwnj;ಬಿ (LHB) ಬೋಗಿಗಳಾಗಿ ಬದಲಾಯಿಸುವ ಕಾರ್ಯ ಪ್ರಾರಂಭವಾಗಿದ್ದು, ಈ ಹೊಸ ವ್ಯವಸ್ಥೆ ಮೈಸೂರಿನಿಂದ ಏಪ್ರಿಲ್ 26ರಿಂದ ಹಾಗೂ ಬೆಳಗಾವಿಯಿಂದ ಏಪ್ರಿಲ್ 27ರಿಂದ ಜಾರಿಗೆ ಬರಲಿದೆ.&lt;/p&gt;&lt;h2&gt;21 ಬೋಗಿಗಳನ್ನು ಹೊಂದಿದ್ದ ಈ ರೈಲು&lt;/h2&gt;&lt;p&gt;ಇದುವರೆಗೆ 21 ಬೋಗಿಗಳನ್ನು ಹೊಂದಿದ್ದ ಈ ರೈಲು, ಇನ್ನು ಮುಂದೆ ಒಟ್ಟು 20 ಎಲ್ಎಚ್&zwnj;ಬಿ ಬೋಗಿಗಳೊಂದಿಗೆ ಸಂಚರಿಸಲಿದೆ. ಹೊಸ ವ್ಯವಸ್ಥೆಯಡಿ ರೈಲಿನಲ್ಲಿ 1 ಎಸಿ ಚೇರ್ ಕಾರ್, 12 ಸಾಮಾನ್ಯ ದರ್ಜೆಯ ಬೋಗಿಗಳು, 5 ದ್ವಿತೀಯ ದರ್ಜೆ ಸಿಟಿಂಗ್ ಚೇರ್ ಕಾರ್ ಬೋಗಿಗಳು, 1 ಜನರೇಟರ್ ಕಾರ್ ಹಾಗೂ ದಿವ್ಯಾಂಗ ಸ್ನೇಹಿ ಸೌಲಭ್ಯಗಳನ್ನು ಹೊಂದಿರುವ 1 ಬ್ರೇಕ್ ವ್ಯಾನ್ ಒಳಗೊಂಡಿರಲಿದೆ.&lt;/p&gt;&lt;p&gt;ಎಲ್ಎಚ್&zwnj;ಬಿ ಬೋಗಿಗಳು ಐಸಿಎಫ್ ಬೋಗಿಗಳಿಗಿಂತ ಹೆಚ್ಚಿನ ಸುರಕ್ಷತೆ ಮತ್ತು ಆಧುನಿಕ ತಂತ್ರಜ್ಞಾನ ಹೊಂದಿದ್ದು, ವೇಗ ಮತ್ತು ಸ್ಥಿರತೆಯಲ್ಲಿ ಉತ್ತಮ ಅನುಭವವನ್ನು ನೀಡುತ್ತವೆ. ವಿಶೇಷವಾಗಿ ಅಪಘಾತಗಳ ಸಂದರ್ಭಗಳಲ್ಲಿ ಹಾನಿ ಕಡಿಮೆ ಆಗುವಂತೆ ವಿನ್ಯಾಸಗೊಳಿಸಿರುವುದು ಇದರ ಪ್ರಮುಖ ವೈಶಿಷ್ಟ್ಯವಾಗಿದೆ. ಜೊತೆಗೆ ಪ್ರಯಾಣಿಕರಿಗೆ ಆರಾಮದಾಯಕ ಆಸನ ವ್ಯವಸ್ಥೆ, ಸುಧಾರಿತ ಬ್ರೇಕಿಂಗ್ ಸಿಸ್ಟಂ ಹಾಗೂ ಶಬ್ದ ಮತ್ತು ಕಂಪನ ಕಡಿಮೆ ಇರುವ ಪ್ರಯಾಣ ಅನುಭವವನ್ನು ಈ ಬೋಗಿಗಳು ಒದಗಿಸುತ್ತವೆ.&lt;/p&gt;&lt;h2&gt;ಮೈಸೂರು ಮತ್ತು ಬೆಳಗಾವಿ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಸುರಕ್ಷಿತ&lt;/h2&gt;&lt;p&gt;ಈ ಬದಲಾವಣೆಯಿಂದ ಮೈಸೂರು ಮತ್ತು ಬೆಳಗಾವಿ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಸುರಕ್ಷಿತ, ಸುಲಭ ಮತ್ತು ಆರಾಮದಾಯಕ ಪ್ರಯಾಣ ಸಾಧ್ಯವಾಗಲಿದ್ದು, ದಕ್ಷಿಣ ಪಶ್ಚಿಮ ರೈಲ್ವೆಯು ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸಲು ಕೈಗೊಂಡಿರುವ ಮತ್ತೊಂದು ಪ್ರಮುಖ ಹೆಜ್ಜೆಯಾಗಿ ಇದು ಪರಿಗಣಿಸಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/indian-railways-mysuru-belagavi-vishwamanava-express-upgraded-with-modern-lhb-coaches-from-april-26-gdp/articleshow-hk8bisv"/>
        </item>
        <item>
            <title><![CDATA[ಹಿಂಡಲಗಾ ಜೈಲಿನ ಮೇಲೆ ದಾಳಿ, ಸಿಗರೆಟ್, ಜೀಮ್ ಡೆಂಬಲ್ಸ್ ಪತ್ತೆ! ಜೈಲು ಸಿಬ್ಬಂದಿ ಚಳಿಬಿಡಿಸಿದ ಡಿಜಿಪಿ ಅಲೋಕ ಕುಮಾರ]]></title>
            <link>https://kannada.asianetnews.com/karnataka-districts/karnataka-dgp-alok-kumar-conducts-sudden-inspection-at-belagavi-hindalga-jail-gdp/articleshow-iutvvmk</link>
            <guid isPermaLink="true">https://kannada.asianetnews.com/karnataka-districts/karnataka-dgp-alok-kumar-conducts-sudden-inspection-at-belagavi-hindalga-jail-gdp/articleshow-iutvvmk</guid>
            <pubDate>Fri, 17 Apr 2026 12:36:23 +0530</pubDate>
            <description><![CDATA[ಬಂದಿಖಾನೆ ಡಿಜಿಪಿ ಅಲೋಕ ಕುಮಾರ್ ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಎರಡು ಶ್ವಾನಗಳ ಸಹಾಯದಿಂದ ನಡೆದ ಈ ಶೋಧದಲ್ಲಿ ಸಿಗರೇಟ್ ಪ್ಯಾಕೆಟ್ ಹಾಗೂ ಡಂಬೆಲ್ಸ್ ಪತ್ತೆಯಾಗಿದ್ದು, ನಿರ್ಲಕ್ಷ್ಯ ತೋರಿದ ಜೈಲು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpd40k7aghaft77ytz7qcy93,imgname-hindalga-jail-1776409398506.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಜಿಲ್ಲೆಯ ಹಿಂಡಲಗಾ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಬಂದಿಖಾನೆ ಡಿಜಿಪಿ ಅಲೋಕ ಕುಮಾರ್ ಅವರು ದಿಢೀರ್ ದಾಳಿ ನಡೆಸಿದ್ದಾರೆ. ಈ ದಾಳಿಯು ಬೆಳಗಾವಿ ನಗರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಜೈಲು ವ್ಯವಸ್ಥೆಯ ಮೇಲಿನ ಕಟ್ಟುನಿಟ್ಟಿನ ಕ್ರಮಗಳ ಸೂಚನೆ ನೀಡಿದೆ.&lt;/p&gt;&lt;h2&gt;ಎರಡು ಶ್ವಾನಗಳ ಸಹಾಯದಿಂದ ನಡೆಸಲಾದ ವಿಶೇಷ ಶೋಧ&lt;/h2&gt;&lt;p&gt;ಡಿಜಿಪಿ ಅಲೋಕ ಕುಮಾರ್ ಅವರ ನೇತೃತ್ವದಲ್ಲಿ ಒಟ್ಟು 52 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಬೆಳಗಾವಿ ನಗರ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಎರಡು ಶ್ವಾನಗಳ ಸಹಾಯದಿಂದ ನಡೆಸಲಾದ ಈ ವಿಶೇಷ ಶೋಧ ಕಾರ್ಯಾಚರಣೆ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಿತು. ಈ ವೇಳೆ ಜೈಲಿನ ವಿವಿಧ ವಿಭಾಗಗಳು ಹಾಗೂ ಕೈದಿಗಳ ಸೆಲ್&zwnj;ಗಳನ್ನು ಸವಿಸ್ತಾರವಾಗಿ ಪರಿಶೀಲಿಸಲಾಯಿತು.&lt;/p&gt;&lt;h2&gt;ಏನೆಲ್ಲ ಸಿಕ್ಕಿದೆ?&lt;/h2&gt;&lt;p&gt;ಶೋಧ ಕಾರ್ಯಾಚರಣೆಯ ವೇಳೆ ಒಂದು ಸಿಗರೆಟ್ ಪ್ಯಾಕೇಟ್ ಮತ್ತು ಜಿಮ್&zwnj;ನಲ್ಲಿ ಬಳಸುವ ಡಂಬೆಲ್ಸ್ ಪತ್ತೆಯಾಗಿವೆ. ಜೈಲಿನೊಳಗೆ ಇಂತಹ ವಸ್ತುಗಳ ಇರುವಿಕೆ ಗಂಭೀರ ವಿಚಾರವಾಗಿದ್ದು, ಭದ್ರತಾ ಲೋಪಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.&lt;/p&gt;&lt;p&gt;ಈ ಸಂದರ್ಭದಲ್ಲಿ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವನ್ನು ಗಮನಿಸಿದ ಡಿಜಿಪಿ ಅಲೋಕ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಜೊತೆಗೆ, ಮರಳುವ ವೇಳೆ ಜೈಲಾಧಿಕಾರಿಗಳಿಗೆ ಚಿಕ್ಕ ಶಿಕ್ಷೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರೆಂದು ತಿಳಿದುಬಂದಿದೆ.&lt;/p&gt;&lt;p&gt;ಜೈಲಿನೊಳಗೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಹಾಗೂ ಭದ್ರತೆಯನ್ನು ಬಲಪಡಿಸಲು ಈ ದಾಳಿ ಕೈಗೊಳ್ಳಲಾಗಿದೆ. ಈ ಕ್ರಮದಿಂದ ಜೈಲು ವ್ಯವಸ್ಥೆಯಲ್ಲಿ ಮತ್ತಷ್ಟು ಶಿಸ್ತು ಮತ್ತು ಕಟ್ಟುನಿಟ್ಟು ಜಾರಿಗೆ ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-dgp-alok-kumar-conducts-sudden-inspection-at-belagavi-hindalga-jail-gdp/articleshow-iutvvmk"/>
        </item>
        <item>
            <title><![CDATA[ಪ್ರೀತಿಗಾಗಿ ಪ್ರಾಣ ಬಿಟ್ಟ ಸತ್ಯವ್ವ: 12ನೇ ವಯಸ್ಸಿನಲ್ಲೇ ಮದುವೆ ಫಿಕ್ಸ್ ಮಾಡಿ ಮಗಳ ಬದುಕನ್ನೇ ಕಸಿದುಕೊಂಡ ಪೋಷಕರು]]></title>
            <link>https://kannada.asianetnews.com/gallery/relationship/belagavi-honor-killing-fixed-marriage-at-12-her-own-family-kills-her-for-loving-pcfnzuy</link>
            <guid isPermaLink="true">https://kannada.asianetnews.com/gallery/relationship/belagavi-honor-killing-fixed-marriage-at-12-her-own-family-kills-her-for-loving-pcfnzuy</guid>
            <pubDate>Wed, 15 Apr 2026 17:30:56 +0530</pubDate>
            <description><![CDATA[&lt;p&gt;ಆಕೆಗೆ ಏನು ಅರಿಯದ ವಯಸ್ಸಲ್ಲಿ ಕುಟುಂಬದವರೇ ಮದ್ವೆ ನಿಶ್ಚಯ ಮಾಡಿದ್ದರು. ಆದರೆ ಹರೆಯಕ್ಕೆ ಕಾಲಿರಿಸಿದ ಆಕೆಗೆ ಬೇರೊಬ್ಬನ ಜತೆ ಪ್ರೀತಿಯಾಗಿತ್ತು. ಪ್ರೀತಿ ತಿಳಿಯುತ್ತಿದ್ದಂತೆ ಮದುವೆ ಮಾಡಿದ್ರು ಪೋಷಕರು ಆದರೆ ಪ್ರೀತಿಸಿದವನೊಂದಿಗೆ ಅಲ್ಲ. ಹೀಗಾಗಿ ತನ್ನ ಗಂಡನ ಬಿಟ್ಟು ಓಡಿ ಹೋದ ಆಕೆಯ ಕತೆ ಮುಂದೇನಾಯ್ತು&hellip;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp8f2cgwvy74wjzcqr16paf8,imgname-belgavi-maryada-hatye--1--1776253219355.jpg" type="image/jpeg" height="390" width="690"/>
            <content:encoded><![CDATA[&lt;p&gt;ಆಕೆಗೆ ಏನು ಅರಿಯದ ವಯಸ್ಸಲ್ಲಿ ಕುಟುಂಬದವರೇ ಮದ್ವೆ ನಿಶ್ಚಯ ಮಾಡಿದ್ದರು. ಆದರೆ ಹರೆಯಕ್ಕೆ ಕಾಲಿರಿಸಿದ ಆಕೆಗೆ ಬೇರೊಬ್ಬನ ಜತೆ ಪ್ರೀತಿಯಾಗಿತ್ತು. ಪ್ರೀತಿ ತಿಳಿಯುತ್ತಿದ್ದಂತೆ ಮದುವೆ ಮಾಡಿದ್ರು ಪೋಷಕರು ಆದರೆ ಪ್ರೀತಿಸಿದವನೊಂದಿಗೆ ಅಲ್ಲ. ಹೀಗಾಗಿ ತನ್ನ ಗಂಡನ ಬಿಟ್ಟು ಓಡಿ ಹೋದ ಆಕೆಯ ಕತೆ ಮುಂದೇನಾಯ್ತು&hellip;&lt;/p&gt;&lt;img&gt;&lt;p&gt;ವಿವಾಹಿತನ ಬಿಟ್ಟು ಪ್ರೀತಿಸಿದಾತನ ಜೊತೆ ಓಡಿ ಹೋಗಿ ಮನೆಯ ಮಾನ ಕಳೆದಳು ಎಂದು ಪೋಷಕರೇ ತಮ್ಮ ವಿವಾಹಿತ ಮಗಳನ್ನು ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಕ್ಷೇತ್ರದಲ್ಲಿ ನಡೆದಿದ್ದು, ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಎಸ್ಪಿ ಕೆ ರಾಮರಾಜನ್ ಮಾಹಿತಿ ನೀಡಿದ್ದು, ಪ್ರಕರಣದ ಪಿನ್ ಟು ಪಿನ್ ಡಿಟೇಲ್ ಇಲ್ಲಿದೆ. ಕೊಲೆಯಾದ ಸತ್ಯೆವ್ವಾ ಹೆಳವರ್&zwnj;ಗೆ 12ನೇ ವಯಸ್ಸಿನಲ್ಲಿಯೇ ಮದುವೆ ನಿಗದಿ ಮಾಡಲಾಗಿತ್ತು. ಆದರೆ ಸತ್ಯೆವ್ವಾ ತನ್ನದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು.&lt;/p&gt;&lt;img&gt;&lt;p&gt;ಕೃಷ್ಣ ಪಾಟೀಲ್ ಜೊತೆಗಿನ ಸತ್ಯೆವ್ವಾಳ ಪ್ರೀತಿಯ ವಿಚಾರ ಮನೆಯವರಿಗೆ ತಿಳಿಯುತ್ತಿದ್ದಂತೆ ಸತ್ಯೆವ್ವಾಳ ಕುಟುಂಬದವರು ಆಕೆಗೆ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಜೊತೆಗೆ ಮದುವೆ ಮಾಡಿದ್ದರು. ನಾಲ್ಕು ವರ್ಷದ ಹಿಂದೆ ಸತ್ಯೆವ್ವಾಳ ಮದುವೆ ಸಂತೋಷ್ ಹೆಳವಿ ಜೊತೆ ನಡೆದಿತ್ತು. ಆದರೆ ಮದುವೆಯ ನಂತರವೂ ಸತ್ಯೆವ್ವಾಗೆ ತಾನು ಪ್ರೀತಿಸಿದ ಕೃಷ್ಣಾ ಪಾಟೀಲ್ ಜೊತೆ ಸಂಪರ್ಕವಿತ್ತು. ಇತ್ತ ಆಕೆಯ ಪತಿ ಸಂತೋಷ್ ಹೆಳವಿ ಕುಡಿತಕ್ಕೆ ದಾಸನಾಗಿದ್ದ. ಇತ್ತೀಚೆಗೆ ಅಂದರೆ ಫೆ.17 ರಂದು ಸತ್ಯೆವ್ವಾ ಗಂಡನ ಮನೆಯಿಂದ ಬಂದು ತನ್ನ ಪ್ರಿಯಕರ ಕೃಷ್ಣಾ ಪಾಟೀಲ್ ಜೊತೆ ಓಡಿ ಹೋಗಿದ್ದಳು.&lt;/p&gt;&lt;img&gt;&lt;p&gt;ಓಡಿ ಹೋದ ನಂತರ ಸವದತ್ತಿ ತಾಲೂಕಿನ ಬೆಳವಾಡಿಯಲ್ಲಿ ಬಾಡಿಗೆ ಮನೆ ಮಾಡಿದ ಈ ಜೋಡಿ ಅಲ್ಲೇ ಉಳಿದಿದ್ದರು. ಈ ವಿಚಾರ ಸತ್ಯವ್ವಾ ಮನೆಯವರಿಗೆ ಗೊತ್ತಾಗಿ ಹದಿನೈದು ದಿನದ ಹಿಂದೆ ಅವರನ್ನು ಬೆಳವಾಡಿಯಿಂದ ತಮ್ಮ ಮನೆಗೆ ಕರೆತಂದಿದ್ದರು. ನಂತರ ಎರಡು ಕುಟುಂಬಗಳ ಮಧ್ಯೆ ಸಂಧಾನ ನಡೆದು ಸತ್ಯೆವ್ವಾಳನ್ನು ಆಕೆಯ ಮನೆಗೆ ಹಾಗೂ ಕೃಷ್ಣ ಪಾಟೀಲ್&zwnj;ನನ್ನು ಆತನ ಮನೆಗೆ ಆತನ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದರು.&lt;/p&gt;&lt;img&gt;&lt;p&gt;ನಂತರ ಆಕೆಯನ್ನು ಆಕೆಯ ಕುಟುಂಬದವರು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಾರ್ಚ್&zwnj; 21ರಂದು ಅಲ್ಲಿ ಸಂಧಾನ ನಡೆದಿದ್ದು, ಈ ವೇಳೆ ಗಲಾಟೆಯಾಗಿದ್ದು, ಸತ್ಯವ್ವ ತಾನು ಕೃಷ್ಣ ಪಾಟೀಲ್ ಜೊತೆಗೆ ಇರುವುದಾಗಿ ಹೇಳಿದ್ದಾರೆ. ತಾಯಿಯ ಜೊತೆಗೂ ಸತ್ಯವ್ವ ಗಲಾಟೆ ಮಾಡಿದ್ದು, ನಂತರ ಆಕೆಯ ಚಿಕ್ಕಪ್ಪ ಪ್ರಕಾಶ, ಸಹೋದರ ಶಾನೂರು ಹೇಳವರ್, ಅಕ್ಕನ್ನ ಗಂಡ ಕಲ್ಲಪ್ಪ ಸೇರಿ ಸತ್ಯವ್ವಗೆ ಇಲಿ ಪಾಶಾಣ ನೀಡಿದ್ದು, ವಿಷ ಪ್ರಾಶನದ ಬಳಿಕ ಆಕೆ ಸಾವನ್ನಪ್ಪಿದ್ದಾಳೆ. ತಕ್ಷಣವೇ ಸ್ಥಳೀಯರ ಸಹಾಯ ಪಡೆದು ಆಕೆಯ ಅಂತ್ಯಸಂಸ್ಖಾರ ಮಾಡಿದ ಆಕೆಯ ಮನೆಯವರು ಬಳಿಕ ಸಂಬಂಧಿಕರಿಗೆ ಆಕೆ ಲೋಬಿಪಿಯಿಂದ ಸಾವನ್ನಪ್ಪಿದ್ದಾಗಿ ಸುಳ್ಳು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಏಪ್ರಿಲ್ 10ರಂದು ಈ ಬಗ್ಗೆ ರಹಸ್ಯ ಮಾಹಿತಿಯೊಂದು ಪೊಲೀಸರಿಗೆ ಸಿಕ್ಕಿದ್ದು, ತಂದೆ ತಾಯಿಯೇ ಸೇರಿ ಮಹಾರಾಷ್ಟ್ರದಲ್ಲಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ ಸತ್ಯವ್ವ ನಾಪತ್ತೆ ಆಗಿರುವ ವಿಚಾರವೂ ತಿಳಿಯುತ್ತದೆ. ಈ ಸಂಬಂಧ ಪೊಲೀಸರು ಕೃಷ್ಣ ಪಾಟೀಲ್&zwnj;ನನ್ನು ವಿಚಾರಣೆ ಮಾಡುತ್ತಾರೆ. ಈ ವಿಚಾರಣೆ ವೇಳೆ ಈ ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದಾಗಿ ಎಸ್&zwnj;ಪಿ ಕೆ ರಾಮರಾಜನ್ ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/relationship/belagavi-honor-killing-fixed-marriage-at-12-her-own-family-kills-her-for-loving-pcfnzuy"/>
        </item>
        <item>
            <title><![CDATA[ಶಾಸಕರು ಮಂತ್ರಿ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ: ಶಾಸಕ ಲಕ್ಷ್ಮಣ ಸವದಿ]]></title>
            <link>https://kannada.asianetnews.com/karnataka-districts/karnataka-cabinet-reshuffle-mla-laxman-savadi-statement-gvd/articleshow-qg8ex53</link>
            <guid isPermaLink="true">https://kannada.asianetnews.com/karnataka-districts/karnataka-cabinet-reshuffle-mla-laxman-savadi-statement-gvd/articleshow-qg8ex53</guid>
            <pubDate>Thu, 16 Apr 2026 21:42:33 +0530</pubDate>
            <description><![CDATA[&lt;p&gt;ಅನೇಕ ಶಾಸಕರು ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದಾರೆ. ಎರಡೂವರೆ ವರ್ಷ ಆಗಿರುವುದರಿಂದ ಸಂಪುಟ ಪುನಾರಚನೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಶಾಸಕರು ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gxt0nm2ad76yv3w8wqbwxwkx,imgname-Lakshman-Savadi-1681279078473.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಅಥಣಿ (ಏ.16): &lt;/strong&gt;ಸರ್ಕಾರಕ್ಕೆ ಎರಡೂವರೆ ವರ್ಷ ಕಳೆದ ನಂತರ ಬೇರೆಯವರಿಗೆ ಸಚಿವ ಸ್ಥಾನದ ಅವಕಾಶ ಕೊಡುತ್ತೇವೆ ಎಂದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಗಳು, ಅಧ್ಯಕ್ಷರು ಹೇಳಿದ್ದರು. ಹೀಗಾಗಿ, ಅನೇಕ ಶಾಸಕರು ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದಾರೆ. ಎರಡೂವರೆ ವರ್ಷ ಆಗಿರುವುದರಿಂದ ಸಂಪುಟ ಪುನಾರಚನೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಶಾಸಕರು ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.&lt;/p&gt;&lt;p&gt;ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೂ ಗೊತ್ತಿದೆ. ಅವರ ಒಪ್ಪಿಗೆ ಪಡೆದೇ ಶಾಸಕರು ದೆಹಲಿಗೆ ಹೋಗಿದ್ದಾರೆ. ಅದರಲ್ಲಿ ಏನೂ ವಿಶೇಷವಿಲ್ಲ ಎಂದರು. ನೂತನ ಸಚಿವ ಸಂಪುಟದಲ್ಲಿ ನಿಮ್ಮ ಹೆಸರೂ ಇದೆಯೇ, ತಾವೇಕೆ ದೆಹಲಿಗೆ ತೆರಳಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಮಂತ್ರಿಯಾಗುತ್ತೇನೆ ಎಂದು ಎಲ್ಲಿಯೂ ಹೇಳಿರಲಿಲ್ಲ. ಜನವರಿ ತಿಂಗಳ ನಂತರ ಶುಕ್ರದೆಸೆ ಬರುತ್ತದೆ ಎಂದಿದ್ದೆ. ಮಂತ್ರಿಯಾಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ.&lt;/p&gt;&lt;p&gt;ಮಂತ್ರಿ ಸ್ಥಾನ ಬಂದರೆ ಅದನ್ನು ನಿಭಾಯಿಸಬಲ್ಲೆ, ಬಾರದು ಬಪ್ಪದು, ಬಪ್ಪದು ತಪ್ಪದು ಎಂಬಂತೆ ನಾವು ನಮ್ಮ ಕೆಲಸದಲ್ಲಿ ನಿರತರಾಗಿರಬೇಕು. ಮಂತ್ರಿಸ್ಥಾನ ಬರುವುದಾದರೆ ಬಂದೇ ಬರುತ್ತದೆ. ನನಗೆ ಮಂತ್ರಿ ಸ್ಥಾನಕ್ಕಿಂತ ಮತಕ್ಷೇತ್ರದ ಅಭಿವೃದ್ಧಿ ಮುಖ್ಯ. ಅಥಣಿ ಕ್ಷೇತ್ರಕ್ಕೆ ಇಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಮುಖ್ಯಮಂತ್ರಿಗಳು ಸಾಕಷ್ಟು ಅನುದಾನ ನೀಡಿದ್ದಾರೆ. ₹ 508 ಕೋಟಿ ವೆಚ್ಚದ ಕೃಷಿ ಮಹಾವಿದ್ಯಾಲಯ ನಿರ್ಮಾಣಕ್ಕೆ ಬಜೆಟ್&zwnj;ನಲ್ಲಿ ಅವಕಾಶ ಕಲ್ಪಿಸಿದ್ದಾರೆ. ಅದೇ ದೊಡ್ಡ ಶುಕ್ರದೆಸೆ ಎಂದರು.&lt;/p&gt;&lt;h2&gt;&lt;strong&gt;ಸಂವಿಧಾನದ ಆಶಯಗಳಿಗೆ ಪ್ರತಿಯೊಬ್ಬರೂ ಬದ್ಧರಾಗಿ&lt;/strong&gt;&lt;/h2&gt;&lt;p&gt;ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ದೂರದೃಷ್ಟಿಯಿಂದ ಮೂಡಿಬಂದಿರುವ ಸಂವಿಧಾನದ ಆಶಯಗಳಾದ ಸೌಹಾರ್ದತೆ, ಸಮಾನತೆ ಮತ್ತು ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನು ಬದ್ಧನಾಗಿರಬೇಕು ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಕಲಾವಿದ ವಿನಾಯಕ ಸುತಾರ ನೂಲಿನ ದಾರದ ಸಹಾಯದಿಂದ ತಮ್ಮ ಕೌಶಲ್ಯದ ಮೂಲಕ ಚಿತ್ರಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.&lt;/p&gt;&lt;p&gt;ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ ಮೇಲೆ ನಿರ್ಮಿತವಾಗಿದೆ. ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನ ನಮ್ಮದು. ಹಲವು ಜಾತಿ ಧರ್ಮಗಳು ಇರುವ ನಮ್ಮ ದೇಶಕ್ಕೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದ ಅಡಿ ಅಂಬೇಡ್ಕರ್ ಅವರು ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು. ಅವರ ಜನ್ಮ ದಿನಾಚರಣೆ ಕೇವಲ ಉತ್ಸವವಾಗದೇ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸುವ ಮೂಲಕ ಸುಭದ್ರ ರಾಷ್ಟ್ರದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-cabinet-reshuffle-mla-laxman-savadi-statement-gvd/articleshow-qg8ex53"/>
        </item>
        <item>
            <title><![CDATA[Jayesh Pujari: ಗಡ್ಕರಿಗೆ ಬೆದರಿಕೆ ಹಾಕಿದ್ದವನಿಗೆಉಗ್ರರ ಜತೆಗೆ ನಂಟು ಬಹಿರಂಗ!]]></title>
            <link>https://kannada.asianetnews.com/india-news/probe-reveals-accused-who-threatened-nitin-gadkari-has-links-with-terrorist-afsar-pasha-rav/articleshow-rerd1rw</link>
            <guid isPermaLink="true">https://kannada.asianetnews.com/india-news/probe-reveals-accused-who-threatened-nitin-gadkari-has-links-with-terrorist-afsar-pasha-rav/articleshow-rerd1rw</guid>
            <pubDate>Sat, 25 Apr 2026 04:58:18 +0530</pubDate>
            <description><![CDATA[&lt;p&gt;ಹಿಂಡಲಗಾ ಜೈಲಿನಲ್ಲಿದ್ದ ಜಯೇಶ್ ಪೂಜಾರಿ, ಉಗ್ರ ಅಪ್ಸರ್ ಪಾಷಾ ಜೊತೆ ಸೇರಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದನು ಎಂದು ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೇಂದ್ರ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿ ₹100 ಕೋಟಿಗೆ ಬೇಡಿಕೆಯಿಟ್ಟಿದ್ದ ಆರೋಪಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h8y8xgppkn6a0rm0qpy3evmh,imgname--------.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.25): &lt;/strong&gt;ಹಿಂಡಲಗಾ ಕೇಂದ್ರ ಕಾರಾಗೃಹ ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ ಎಂಬ ಗಂಭೀರ ಆರೋಪಗಳ ಮಧ್ಯೆಯೇ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ಈ ವಿಷಯ ದೃಢಪಟ್ಟಿದೆ.&lt;/p&gt;&lt;p&gt;ಬೆಂಗಳೂರು ಮತ್ತು ಢಾಕಾ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿ ಅಪ್ಸರ್ ಪಾಷಾ ಜೊತೆ ಸೇರಿ ಜಯೇಶ್ ಪೂಜಾರಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಾನೆಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜಯೇಶ್&zwnj; ಪೂಜಾರಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಕೋರ್ಟ್&zwnj;ಗೆ ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ.&lt;/p&gt;&lt;p&gt;ಪ್ರಕರಣವೊಂದರ ವಿಚಾರಣೆ ವೇಳೆ ನಾಗ್ಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಾಗ್ಪುರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ನಿಲೇಶ್ ಪಾಳ್ವೆ ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಹಿಂಡಲಗಾ ಜೈಲಿನಲ್ಲಿದ್ದೇ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿ ₹100 ಕೋಟಿ ಹಣದ ಬೇಡಿಕೆ ಇಟ್ಟಿದ್ದ ಆರೋಪ ಜಯೇಶ್ ಪೂಜಾರಿ ಮೇಲಿದೆ. ಹಣ ನೀಡದಿದ್ದರೆ ಗಡ್ಕರಿ ಅವರ ಮನೆ ಸ್ಫೋಟ ಮಾಡುವುದಾಗಿ ಬೆದರಿಕೆ ಕರೆ ಮಾಡಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್&zwnj;ಐಎ ಹಾಗೂ ನಾಗ್ಪುರ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.&lt;/p&gt;&lt;p&gt;2024ರಲ್ಲಿ ಬೆಳಗಾವಿ ನ್ಯಾಯಾಲಯದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪವೂ ಜಯೇಶ್ ಪೂಜಾರಿ ಮೇಲಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/probe-reveals-accused-who-threatened-nitin-gadkari-has-links-with-terrorist-afsar-pasha-rav/articleshow-rerd1rw"/>
        </item>
        <item>
            <title><![CDATA[ಹೆತ್ತ ತಾಯಿಯ ಶವಕ್ಕೆ ಹೆಗಲು ಕೊಡದ ಮಕ್ಕಳು; ಸಮಾಜ ಸೇವಕರಿಂದ್ಲೇ ಅಂತ್ಯಕ್ರಿಯೆ!]]></title>
            <link>https://kannada.asianetnews.com/karnataka-districts/sons-refuse-to-carry-mother-s-body-for-final-rites-social-workers-perform-the-funeral-this-incident-happen-belagavi-rav/articleshow-shyt914</link>
            <guid isPermaLink="true">https://kannada.asianetnews.com/karnataka-districts/sons-refuse-to-carry-mother-s-body-for-final-rites-social-workers-perform-the-funeral-this-incident-happen-belagavi-rav/articleshow-shyt914</guid>
            <pubDate>Tue, 21 Apr 2026 07:36:54 +0530</pubDate>
            <description><![CDATA[ಬೆಳಗಾವಿಯ ಶಾಹು ನಗರದಲ್ಲಿ ಅಂಜನಾ ಧಾಮೋನೆ ಎಂಬ ವೃದ್ಧೆ ನಿಧನರಾದಾಗ, ಅವರ ಇಬ್ಬರು ಪುತ್ರರು ಅಂತ್ಯಕ್ರಿಯೆ ನಡೆಸಲು ನಿರಾಕರಿಸಿದ್ದಾರೆ. ಮಕ್ಕಳ ಅಮಾನವೀಯ ವರ್ತನೆಯಿಂದಾಗಿ, ಸ್ಥಳೀಯ ಸಮಾಜ ಸೇವಕರೇ ಮುಂದೆ ಬಂದು ವೃದ್ಧೆಯ ಅಂತಿಮ ಸಂಸ್ಕಾರವನ್ನು ನೆರವೇರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kppwetpywwm03hrk6ezfcx80,imgname-----------------------2026-04-21t073323.343-1776737020638.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.21):&lt;/strong&gt; ತಾಯಿಯೇ ಜೀವದ ಮೂಲ ಎಂದು ಹೇಳಿಕೊಳ್ಳುವ ಸಮಾಜದಲ್ಲೇ ಇಬ್ಬರು ಪುತ್ರರು ತಮ್ಮ ತಾಯಿಯ ಅಂತ್ಯಕ್ರಿಯೆಗೂ ಬಾರದೆ ಅಮಾನವೀಯವಾಗಿ ವರ್ತಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ಇಬ್ಬರು ಪುತ್ರರಿದ್ರೂ ತಾಯಿ ಒಂಟಿ ಬದುಕು&lt;/h2&gt;&lt;p&gt;ಬೆಳಗಾವಿಯ ಶಾಹು ನಗರದ ಅಂಜನಾ ಧಾಮೋನೆ ಎಂಬ ವೃದ್ಧೆ ಏ.15ರಂದು ನಿಧನರಾಗಿದ್ದರು. ಆಕೆಗೆ ಇಬ್ಬರು ಪುತ್ರರು. ಕಷ್ಟದಲ್ಲಿ ಸಾಕಿ ಸಲುಹಿ ದೊಡ್ಡವರನ್ನಾಗಿ ಬೆಳೆಸಿದ್ದ ತಾಯಿ. ಆದರೆ ತಾಯಿ ಮಾತ್ರ ತನ್ನ ಕೊನೆ ದಿನಗಳನ್ನ ಒಂಟಿಯಾಗಿ ಕಳೆದಿರುವುದು ದುರಂತ.&lt;/p&gt;&lt;h3&gt;'ನೀವೇ ಮಾಡಿಕೊಳ್ಳಿ' ಎಂದ ಪುತ್ರರು; ತಾಯಿ ಅಂತ್ಯಕ್ರಿಯೆಗೆ ನೆರವಾದ ಸಮಾಜ ಸೇವಕರು&lt;/h3&gt;&lt;p&gt;ಆ ತಾಯಿಗೆ ಇಬ್ಬರು ಗಂಡು ಮಕ್ಕಳಿದ್ದರೂ ಜೀವನದ ಕೊನೆಯ ದಿನಗಳನ್ನು ಒಂಟಿಯಾಗಿಯೇ ಕಳೆದಿದ್ದರು. ವೃದ್ಧೆಯ ನಿಧನದ ವಿಷಯವನ್ನು ಸ್ಥಳೀಯರು ತಕ್ಷಣವೇ ಮಕ್ಕಳಿಗೆ ತಿಳಿಸಿದ್ದಾರೆ. ಆದರೆ, ಪುತ್ರರು ಯಾವುದೇ ದುಃಖ ವ್ಯಕ್ತಪಡಿಸದೇ ನೀವೇ ಅಂತ್ಯಕ್ರಿಯೆ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಇವರೆಂತಹ ಮಕ್ಕಳು! ಹೆತ್ತ ತಾಯಿಯ ಅಂತ್ಯಕ್ರಿಯೆಗೂ ಬಾರದದ ಮಕ್ಕಳ ಬಗ್ಗೆ ಬೇಸರ ವ್ಯಕ್ತಪಡಿಸಿ ನಗರದ ಸಮಾಜ ಸೇವಕರೇ ವೃದ್ಧೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sons-refuse-to-carry-mother-s-body-for-final-rites-social-workers-perform-the-funeral-this-incident-happen-belagavi-rav/articleshow-shyt914"/>
        </item>
        <item>
            <title><![CDATA[ಅಲ್ಪಸಂಖ್ಯಾತ ಮುಖಂಡರ ಹೊರಹಾಕಿದ್ದುಸರಿಯಲ್ಲ ಡಿಕೆಶಿಗೆ ಹೇಳಿರುವೆ: ಸತೀಶ್]]></title>
            <link>https://kannada.asianetnews.com/politics/i-have-told-dk-shivakumar-that-expelling-minority-leaders-is-not-right-says-satish-jarkiholi-rav/articleshow-teqsgii</link>
            <guid isPermaLink="true">https://kannada.asianetnews.com/politics/i-have-told-dk-shivakumar-that-expelling-minority-leaders-is-not-right-says-satish-jarkiholi-rav/articleshow-teqsgii</guid>
            <pubDate>Tue, 21 Apr 2026 08:46:19 +0530</pubDate>
            <description><![CDATA[&lt;p&gt;ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದಲ್ಲಿ ಅಲ್ಪಸಂಖ್ಯಾತ ಮುಖಂಡರನ್ನು ಕಡೆಗಣಿಸಿರುವ ಬಗ್ಗೆ ಚರ್ಚಿಸಿದ್ದು, ಇದನ್ನು ಸರಿಪಡಿಸುವ ಭರವಸೆ ಡಿಕೆಶಿ ನೀಡಿದ್ದಾರೆ ಎಂದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kazrcmq2y0w6bt1ke82dke5m,imgname-dk-shivakumar-satish-jarkiholi-1764149842656.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಏ.21) &lt;/strong&gt;ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಅದು ಕೇವಲ ಸೌಜನ್ಯದ ಭೇಟಿ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಅಥವಾ ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಅಥವಾ ಹೊರಹಾಕಿದ್ದು ಸರಿಯಲ್ಲ ಎಂಬ ತಮ್ಮ ಅಭಿಪ್ರಾಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ತಿಳಿಸಿದ್ದೇನೆ. ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದು, ನಡೆದಿರುವ ಲೋಪದೋಷಗಳನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಇದನ್ನು ಖಂಡಿತವಾಗಿಯೂ ಸರಿಪಡಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾಗಿ ತಿಳಿಸಿದರು.&lt;/p&gt;&lt;p&gt;ಪಕ್ಷವು ಎಲ್ಲ ಸಮುದಾಯಗಳನ್ನು ಒಳಗೊಂಡು ಹೋಗಬೇಕಾದ ಅಗತ್ಯವಿದೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದು, ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವಾಗಿದೆ ಎಂದರು.&lt;/p&gt;&lt;p&gt;ಶಾಸಕ ಎನ್.ಎ.ಹ್ಯಾರಿಸ್ ಮತ್ತು ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಘಟನೆಗಳು ಸಹಜವಾಗಿ ನಡೆಯುತ್ತಿರುತ್ತವೆ. ಆದರೆ, ಈ ನಿರ್ದಿಷ್ಟ ದಾಳಿಯ ಬಗ್ಗೆ ತಮಗೆ ತಿಳಿದಿಲ್ಲ. ದಾಳಿ ನಡೆದರೆ ಕಾನೂನು ಹೋರಾಟ ಮಾಡಬೇಕಷ್ಟೇ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.&lt;/p&gt;&lt;p&gt;ಮಹಿಳಾ ಮೀಸಲಾತಿ ಬಿಲ್ ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾಡಿರುವ ಭಾಷಣದ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ನೀಡುವ ಪ್ರಾಮಾಣಿಕ ಉದ್ದೇಶ ಸರ್ಕಾರಕ್ಕೆ ಇದ್ದಿದ್ದರೆ, ಕ್ಷೇತ್ರ ಪುನರ್ವಿಂಗಡಣೆ ಮತ್ತು ಜನಗಣತಿ ಕಡ್ಡಾಯಗೊಳಿಸಿರುವುದನ್ನು ಕೈ ಬಿಡಬೇಕಿತ್ತು. ಯಾವುದೇ ಷರತ್ತುಗಳಿಲ್ಲದೆ ತಕ್ಷಣವೇ ಜಾರಿಗೆ ತರಬಹುದಿತ್ತು. ಆದರೆ, ಇವೆರಡನ್ನೂ ಲಿಂಕ್ ಮಾಡಿದ್ದೇ ಬಿಲ್ ಸೋಲಲು ಕಾರಣವಾಗಿದೆ. ಪ್ರಧಾನಿ ಮೋದಿ ಅವರು ಏನು ಭಾಷಣ ಮಾಡಿದರೂ ಈಗ ಜನರಿಗೆ ಅದರ ಹಿಂದಿನ ಸಂಚು ಅರ್ಥವಾಗುತ್ತಿದೆ. ಇದು ಕೇವಲ ಚುನಾವಣೆಗಾಗಿ ಮಾಡಿದ ಗಿಮಿಕ್ ಎಂಬ ನಿಜ ಸಂದೇಶ ಜನರಿಗೆ ತಲುಪಿದೆ ಎಂದು ಹೇಳಿದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/i-have-told-dk-shivakumar-that-expelling-minority-leaders-is-not-right-says-satish-jarkiholi-rav/articleshow-teqsgii"/>
        </item>
        <item>
            <title><![CDATA[ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ: ಯತೀಂದ್ರ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/mlc-yathindra-siddaramaiah-mass-marriage-belagavi-event-gvd/articleshow-ugcfufx</link>
            <guid isPermaLink="true">https://kannada.asianetnews.com/karnataka-districts/mlc-yathindra-siddaramaiah-mass-marriage-belagavi-event-gvd/articleshow-ugcfufx</guid>
            <pubDate>Fri, 17 Apr 2026 20:00:00 +0530</pubDate>
            <description><![CDATA[&lt;p&gt;ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದು ನಮ್ಮ ಆಶಯ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ja824npvrbvrs5a29fx9bzj1,imgname-1---2024-10-15t175314.946.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೈಲಹೊಂಗಲ (ಏ.17): &lt;/strong&gt;ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ, ಮಳೆ-ಬೆಳೆ ಸಮೃದ್ಧಿಯಾಗಿ ರೈತರ ಬದುಕು ಉನ್ನತಿಗೇರಲಿ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದು ನಮ್ಮ ಆಶಯ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಸಿದ್ದ ಸುಕ್ಷೇತ್ರ ನಯಾನಗರ ಗ್ರಾಮದ ಸುಖದೇವಾನಂದ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.&lt;/p&gt;&lt;p&gt;ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮಠ-ಮಾನ್ಯಗಳ ಪಾತ್ರ ಅಪಾರವಾಗಿದೆ. ಸಮಾಜದಲ್ಲಿ ಏಕತೆ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಧರ್ಮಪೀಠಗಳು ಮಹತ್ವದ ಪಾತ್ರ ವಹಿಸುತ್ತಿವೆ. ಸುಖದೇವಾನಂದ ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಹಲವು ವರ್ಷಗಳಿಂದ ರಾಜ್ಯದ ವಿವಿಧ ಭಾಗಗಳಿಂದ ಮಠಾಧೀಶರು, ಸಾಧು-ಸಂತರನ್ನು ಆಹ್ವಾನಿಸಿ ಧರ್ಮಸಭೆಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಮತ್ತು ಸತ್ಸಂಸ್ಕಾರಗಳನ್ನು ಬೆಳೆಸುತ್ತಿರುವುದು ಶ್ಲಾಘನೀಯ ಎಂದರು.&lt;/p&gt;&lt;p&gt;ಸಾಮಾಜಿಕ ಕಳಕಳಿ ಇಟ್ಟು ಸಾಮೂಹಿಕ ವಿವಾಹ ಆಯೋಜಿಸಿರುವುದು ಅತ್ಯಂತ ಮಹತ್ವದ ಕೆಲಸ. ಇಂತಹ ಕಾರ್ಯಕ್ರಮಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಭಾರ ಕಡಿಮೆಯಾಗುತ್ತದೆ. ಜೊತೆಗೆ ಸರಳ ವಿವಾಹದ ಸಂದೇಶ ಸಮಾಜಕ್ಕೆ ತಲುಪುತ್ತದೆ. ಅತಿರೇಕದ ಖರ್ಚುಗಳನ್ನು ತೊರೆದು ಸೌಹಾರ್ದತೆಯ ಬದುಕು ನಡೆಸುವ ಅಗತ್ಯವನ್ನು ಇಂತಹ ಕಾರ್ಯಕ್ರಮಗಳು ಒತ್ತಿ ಹೇಳುತ್ತವೆ ಎಂದು ಅಭಿಪ್ರಾಯಪಟ್ಟರು.&lt;/p&gt;&lt;h2&gt;&lt;strong&gt;ಸಂತೋಷ ತಂದಿದೆ&lt;/strong&gt;&lt;/h2&gt;&lt;p&gt;ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉದ್ಘಾಟನೆ ನೆರವೇರಿಸುವ ಅವಕಾಶ ದೊರೆತಿರುವುದು ಸಂತೋಷ ತಂದಿದೆ. ಮಠದ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತರಿಸಿ ಸಮಾಜಕ್ಕೆ ಹೆಚ್ಚಿನ ಸೇವೆ ನೀಡಲಿ ಎಂದು ಹಾರೈಸಿದರು. ಸುಖದೇವಾನಂದ ಪುಣ್ಯಾಶ್ರಮದ ಗುರು ಅಭಿನವ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಸಮಾನತೆ ಮತ್ತು ಸರಳತೆಯನ್ನು ಉತ್ತೇಜಿಸಲು ಸಾಮೂಹಿಕ ವಿವಾಹಗಳನ್ನು ಆಯೋಜಿಸಲಾಗುತ್ತಿದೆ.&lt;/p&gt;&lt;p&gt;ಧರ್ಮ, ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಠಗಳು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಉತ್ತಮ ಸಂಸ್ಕಾರಗಳನ್ನು ಬೆಳೆಸಲು ನಿರಂತರ ಪ್ರಯತ್ನಿಸುತ್ತಿವೆ ಎಂದು ಹೇಳಿದರು, ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ-ಪುನಸ್ಕಾರಗಳು ಹಾಗೂ ಸಾಮೂಹಿಕ ವಿವಾಹಗಳು ಭಕ್ತಿಭಾವದಿಂದ ನೆರವೇರಿದವು. ಕಾರ್ಯಕ್ರಮದಲ್ಲಿ ಒಟ್ಟು 20 ಜೋಡಿಗಳ ಸಾಮೂಹಿಕ ವಿವಾಹ ಜರುಗಿತು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mlc-yathindra-siddaramaiah-mass-marriage-belagavi-event-gvd/articleshow-ugcfufx"/>
        </item>
        <item>
            <title><![CDATA[ಬೆಳಗಾವಿಯಲ್ಲಿ ಗುಂಡಿನ ದಾಳಿ: ಹೈ ಪ್ರೊಫೈಲ್ ಕೇಸ್ ನಡೆಸುತ್ತಿದ್ದ ಪ್ರಭಾವಿ ವಕೀಲೆಯ ನಿವಾಸದ ಮೇಲೆ ಫೈರಿಂಗ್]]></title>
            <link>https://kannada.asianetnews.com/state/belgaum-firing-at-residence-of-influential-lawyer-lawyer-pooja-kakatkar/articleshow-wx91zxz</link>
            <guid isPermaLink="true">https://kannada.asianetnews.com/state/belgaum-firing-at-residence-of-influential-lawyer-lawyer-pooja-kakatkar/articleshow-wx91zxz</guid>
            <pubDate>Sun, 26 Apr 2026 15:35:25 +0530</pubDate>
            <description><![CDATA[&lt;p&gt;ಜಿಲ್ಲೆಯ ಪ್ರಭಾವಿ ವಕೀಲರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ನಿನ್ನೆ ರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಅವರ ಮನೆಯ ಮೊದಲ ಮಹಡಿಯಲ್ಲಿ ಅವರ ಮಗಳು ಸಂಸ್ಕೃತಿ ಓದುವುದರಲ್ಲಿ ಮಗ್ನರಾಗಿದ್ದರು ಎಂದು ತಿಳಿದು ಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq4k0se1bg3y5fj1ftxtr0ts,imgname-belgavi-firing-1777196885441.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಪ್ರಭಾವಿ ವಕೀಲರ ಮನೆ ಮೇಲೆ ಗುಂಡಿನ ದಾಳಿ:&lt;/strong&gt;&lt;/h2&gt;&lt;p&gt;ಬೆಳಗಾವಿ: ಜಿಲ್ಲೆಯ ಪ್ರಭಾವಿ ವಕೀಲರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ನಿನ್ನೆ ರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಗುಂಡಿನ ದಾಳಿ ನಡೆದಿದೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ನಡೆದಿದ್ದು, ಈ ವೇಳೆ ಅವರ ಮನೆಯ ಮೊದಲ ಮಹಡಿಯಲ್ಲಿ ಅವರ ಮಗಳು ಸಂಸ್ಕೃತಿ ಓದುವುದರಲ್ಲಿ ಮಗ್ನರಾಗಿದ್ದರು ಎಂದು ತಿಳಿದು ಬಂದಿದೆ.&lt;/p&gt;&lt;p&gt;ವಕೀಲೆ ಪೂಜಾ ಕಾಕತಕರ್ ಅವರ ಮನೆ ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ಇದ್ದು, ಗುಂಡಿನ ದಾಳಿಯಿಂದಾಗಿ ಮೊದಲ ಮಹಡಿಯ ಗಾಜು ಒಡೆದು ಹೋಗಿದೆ. ಮನೆಯ ಕಿಟಕಿ ಗಾಜಿನ ಮೇಲೆ ಫೈರಿಂಗ್ ಆದ ಗುರುತು ಇದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗುಂಡು ತಗುಲಿರೋ ಕಿಟಕಿ ಗಾಜನ್ನು ಪರಿಶೀಲನೆಗಾಗಿ ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಪೂಜಾ ಕಾಕತಕರ್ ಅವರು ಕಳೆದ 18 ವರ್ಷಗಳಿಂದ ವಕೀಲಿ ವೃತ್ತಿ ಮಾಡುತ್ತಿದ್ದಾರೆ.&lt;/p&gt;&lt;p&gt;ಗುಂಡಿನ ದಾಳಿ ಹಿನ್ನೆಲೆ ಈಗಾಗಲೇ ಪೊಲೀಸರು ವಕೀಲರಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದು, ಈ ಬಗ್ಗೆ ಎಫ್&zwnj;ಎಸ್&zwnj;ಎಲ್&zwnj; ವರದಿಗಾಗಿ ಕಾಯುತ್ತಿದ್ದಾರೆ. ಪೂಜಾ ಅವರು ಹೈ ಪ್ರೊಫೈಲ್ ಪ್ರಕರಣವೊಂದರಲ್ಲಿ ವಾದ ಮಾಡುತ್ತಿರುವ ಹಿನ್ನೆಲೆ ಈ ಗುಂಡಿನ ದಾಳಿ ನಡೆದಿರಬಹುದೇ ಎಂಬ ಶಂಕೆ ಇದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ದೆಹಲಿಯಲ್ಲಿ ಟೇಕಾಫ್ ವೇಳೆ ವಿಮಾನದಲ್ಲಿ ಬೆಂಕಿ: ಆರು ಪ್ರಯಾಣಿಕರಿಗೆ ಗಾಯ&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/state/belgaum-firing-at-residence-of-influential-lawyer-lawyer-pooja-kakatkar/articleshow-wx91zxz"/>
        </item>
        <item>
            <title><![CDATA[Belagavi: ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಕ್ರೂರ ಪತಿರಾಯ]]></title>
            <link>https://kannada.asianetnews.com/gallery/karnataka-districts/belagavi-cruel-husband-sets-wife-on-fire-for-wearing-nightgown-instead-of-saree-hattaravada-village-khanapur-zx8a66q</link>
            <guid isPermaLink="true">https://kannada.asianetnews.com/gallery/karnataka-districts/belagavi-cruel-husband-sets-wife-on-fire-for-wearing-nightgown-instead-of-saree-hattaravada-village-khanapur-zx8a66q</guid>
            <pubDate>Wed, 22 Apr 2026 07:58:43 +0530</pubDate>
            <description><![CDATA[&lt;p&gt;ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ, ನೈಟಿ ಧರಿಸಿದ್ದಕ್ಕೆ ಪತಿ ಕೃಷ್ಣಾ ಪಾಟೀಲ್ ತನ್ನ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ. ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಂಜುಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpsfvgrh2y03gm161w3546nk,imgname-belagavi-fire--2--1776824468241.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ, ನೈಟಿ ಧರಿಸಿದ್ದಕ್ಕೆ ಪತಿ ಕೃಷ್ಣಾ ಪಾಟೀಲ್ ತನ್ನ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ. ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಂಜುಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಮನೆಯಲ್ಲಿ ಸೀರೆ ಬದಲು ನೈಟ್ ಧರಿಸುತ್ತಿದ್ದ ಪತ್ನಿಗೆ ಗಂಡ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ಖಾನಾಪುರ ತಾಲೂಕಿನ ಹತ್ತರವಾಡ ಗ್ರಾಮದ ನಿವಾಸಿ ಕೃಷ್ಣಾ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ ನೀಚ ಗಂಡ. ಸುಟ್ಟ ಗಾಯಗಳಿಂದ ಗಾಯಗೊಂಡಿರುವ ಮಂಜುಳಾ ಪಾಟೀಲ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮಂಜುಳಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.&lt;/p&gt;&lt;img&gt;&lt;p&gt;ಕೂಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣಾ ಪಾಟೀಲ್, ಕುಟುಂಬ ಸಮೇತನಾಗಿ ಹತ್ತರವಾಡ ಗ್ರಾಮದಲ್ಲಿ ವಾಸವಾಗಿದ್ದನು. ಕಳೆದ ಕೆಲವು ದಿನಗಳಿಂದ ಮಂಜುಳಾ ಮತ್ತು ಕೃಷ್ಣಾ ನಡುವೆ ನೈಟಿ ಧರಿಸುವ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಪತಿಯ ತೀವ್ರ ವಿರೋಧದ ನಡುವೆಯೂ ಮಂಜುಳಾ ನೈಟಿ ಧರಿಸಿದ್ದರು. ಇದರಿಂದ ಕೋಪಗೊಂಡ ಕೃಷ್ಣಾ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದಾನೆ. ಬೆಂಕಿ ತಾಗುತ್ತಿದ್ದಂತೆ ಮಂಜುಳಾ ಸಹಾಯಕ್ಕಾಗಿ ಜೋರಾಗಿ ಕೂಗಿದ್ದಾರೆ. ಮಂಜುಳಾ ಅವರ ಧ್ವನಿ ಕೇಳುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬತ್ತಿದ ಜಲಮೂಲ, ಧಾರವಾಡ ಜಿಲ್ಲೆಯ 15 ಹಳ್ಳಿಗೆ ನೀರಿನ ಬರ; ಗ್ರಾಮಗಳ ಸಂಖ್ಯೆ ಹೆಚ್ಚಾಗುವ ಆತಂಕ&lt;/strong&gt;&lt;/p&gt;&lt;img&gt;&lt;p&gt;ಎಂಟು ವರ್ಷಗಳ ಹಿಂದೆ ಕೃಷ್ಣಾ ಹಾಗೂ ಮಂಜುಳಾ ಮದುವೆ ನಡೆದಿತ್ತು. ನಂತರ ಸ್ಥಳೀಯರೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Hubballi: Fly91 ವಿಮಾನಕ್ಕೆ ಮಾತ್ರ ಹವಾಮಾನ ವೈಪರೀತ್ಯ ಹೇಗೆ ಸಾಧ್ಯ? ಸತ್ಯ ಮುಚ್ಚಿಟ್ಟರಾ?&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/belagavi-cruel-husband-sets-wife-on-fire-for-wearing-nightgown-instead-of-saree-hattaravada-village-khanapur-zx8a66q"/>
        </item>
    </channel>
</rss>
