<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 25 Jun 2026 19:18:57 +0530</lastBuildDate>
        <atom:link href="https://kannada.asianetnews.com/rss/belagavi" rel="self" type="application/rss+xml"/>
        <item>
            <title><![CDATA[Shivanand neelannavar release: ಶಿವಂ ಅಸೋಸಿಯೇಟ್ ವಂಚನೆ ಕೇಸ್ ಆರೋಪಿ ಶಿವಾನಂದ ನೀಲಣ್ಣವರ ಜೈಲಿಂದ ಬಿಡುಗಡೆ!]]></title>
            <link>https://kannada.asianetnews.com/gallery/karnataka-districts/belagavi-shivam-associates-fraud-accused-shivanand-neelannavar-released-on-bail-0krllgg</link>
            <guid isPermaLink="true">https://kannada.asianetnews.com/gallery/karnataka-districts/belagavi-shivam-associates-fraud-accused-shivanand-neelannavar-released-on-bail-0krllgg</guid>
            <pubDate>Mon, 15 Jun 2026 21:19:21 +0530</pubDate>
            <description><![CDATA[&lt;p&gt;ಬೆಳಗಾವಿಯ ಶಿವಂ ಅಸೋಸಿಯೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ (shivanand neelannavar), ಬೆಂಗಳೂರಿನ ನ್ಯಾಯಾಲಯದಿಂದ ಮಧ್ಯಂತರ ಜಾಮೀನು (Bail) ಪಡೆದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಠಿಣ ಷರತ್ತುಗಳ ಅಡಿಯಲ್ಲಿ ತನಿಖೆಯನ್ನು ಎದುರಿಸಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv5z54cd3mztys13drq50aam,imgname-shivananda-neelannanavar-release-1781538132365.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿಯ ಶಿವಂ ಅಸೋಸಿಯೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ (shivanand neelannavar), ಬೆಂಗಳೂರಿನ ನ್ಯಾಯಾಲಯದಿಂದ ಮಧ್ಯಂತರ ಜಾಮೀನು (Bail) ಪಡೆದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಠಿಣ ಷರತ್ತುಗಳ ಅಡಿಯಲ್ಲಿ ತನಿಖೆಯನ್ನು ಎದುರಿಸಲಿದ್ದಾರೆ.&lt;/p&gt;&lt;img&gt;&lt;p&gt;ಬೆಳಗಾವಿ ವಂಚನೆ ಪ್ರಕರಣಕ್ಕೆ (Belagavi Fraud Case) ಸಂಬಂಧಿಸಿದಂತೆ ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆಳಗಾವಿಯ 'ಶಿವಂ ಅಸೋಸಿಯೇಟ್' (shivam associates) ವಂಚನೆ ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ (shivanand neelannavar) ಕೊನೆಗೂ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಬಿಡುಗಡೆ ನಡೆದಿದೆ.&lt;/p&gt;&lt;img&gt;&lt;p&gt;ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಶಿವಾನಂದ ನೀಲಣ್ಣವರ ಅವರನ್ನು ಮೇ 15 ರಂದು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದರು. ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಇವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದರು. ಈ ನಡುವೆ ಜಾಮೀನಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಜೂನ್ 12 ರಂದು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.&lt;/p&gt;&lt;img&gt;&lt;p&gt;ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿದ್ದಂತೆ ಮಾಧ್ಯಮಗಳು ಶಿವಾನಂದ ನೀಲಣ್ಣವರ ಅವರನ್ನು ಮಾತನಾಡಿಸಲು ಪ್ರಯತ್ನಿಸಿದವು. ಆದರೆ, ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು, ಕ್ಯಾಮರಾ ಮುಂದೆ ಕೇವಲ &lsquo;ಓಂ ನಮಃ ಶಿವಾಯ, ಇದಕ್ಕಿಂತ ಬೇರೆ ಏನನ್ನೂ ನಾನು ಹೇಳುವುದಿಲ್ಲ&rsquo; ಎಂದು ಹೇಳಿ ಅಲ್ಲಿಂದ ಹೊರಟುಹೋದರು.&lt;/p&gt;&lt;img&gt;&lt;p&gt;&lt;strong&gt;ಆರೋಪಿಗೆ ಮಧ್ಯಂತರ ಜಾಮೀನು ನೀಡುವಾಗ ನ್ಯಾಯಾಲಯವು ಕೆಲವು ಕಠಿಣ ಷರತ್ತುಗಳನ್ನು ವಿಧಿಸಿದೆ:&lt;/strong&gt;&lt;/p&gt;&lt;p&gt;&lt;strong&gt;ಬಾಂಡ್ ಶೂರಿಟಿ: &lt;/strong&gt;3 ಲಕ್ಷ ರೂಪಾಯಿಗಳ ಬಾಂಡ್ ಶೂರಿಟಿಯನ್ನು ಒದಗಿಸಬೇಕು.&lt;/p&gt;&lt;p&gt;&lt;strong&gt;ಹಾಜರಾತಿ:&lt;/strong&gt; ಜೂನ್ 27 ರಂದು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು.&lt;/p&gt;&lt;p&gt;&lt;strong&gt;ದೇಶ ಬಿಡುವಂತಿಲ್ಲ: &lt;/strong&gt;ಯಾವುದೇ ಕಾರಣಕ್ಕೂ ಅನುಮತಿಯಿಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ.&lt;/p&gt;&lt;img&gt;&lt;p&gt;ಶಿವಂ ಅಸೋಸಿಯೇಟ್ ಮೂಲಕ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ ಎಂಬ ಗಂಭೀರ ಆರೋಪ ಇವರ ಮೇಲಿದ್ದು, ತನಿಖೆ ಮುಂದುವರೆದಿದೆ. ಈಗ ಬಿಡುಗಡೆಯಾಗಿರುವ ನೀಲಣ್ಣವರ ಮುಂದಿನ ದಿನಗಳಲ್ಲಿ ತನಿಖೆಗೆ ಹೇಗೆ ಸಹಕರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/belagavi-shivam-associates-fraud-accused-shivanand-neelannavar-released-on-bail-0krllgg"/>
        </item>
        <item>
            <title><![CDATA[Hindalco protest: ಕಂಪನಿಯಲ್ಲಿ ಕೆಲಸ ಮುಂದುವರಿಸಲು ₹5ಲಕ್ಷಕ್ಕೆ  ಬೇಡಿಕೆ ಆರೋಪ; ಹಿಂಡಾಲ್ಕೋ ಆವರಣದಲ್ಲೇ ಕಾರ್ಮಿಕ ಸಾವು, ಉದ್ವಿಗ್ನ!]]></title>
            <link>https://kannada.asianetnews.com/gallery/karnataka-districts/tension-at-belagavi-hindalco-plant-after-worker-s-death-over-alleged-rs-5-lakh-bribe-demand-rav-0nlggqm</link>
            <guid isPermaLink="true">https://kannada.asianetnews.com/gallery/karnataka-districts/tension-at-belagavi-hindalco-plant-after-worker-s-death-over-alleged-rs-5-lakh-bribe-demand-rav-0nlggqm</guid>
            <pubDate>Thu, 25 Jun 2026 04:54:00 +0530</pubDate>
            <description><![CDATA[&lt;p&gt;ಬೆಳಗಾವಿಯ ಹಿಂಡಾಲ್ಕೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕ ಡೆತ್ ನೋಟ್ ಬರೆದಿಟ್ಟು ಕಂಪನಿಯ ಆವರಣದಲ್ಲೇ ಮೃತಪಟ್ಟಿದ್ದಾನೆ, ಹೊಸ ಕಾರ್ಮಿಕರ ನೇಮಕ, ಕೆಲಸ ಮುಂದುವರಿಸಲು 5 ಲಕ್ಷಕ್ಕೆ ಬೇಡಿಕೆ ಇಟ್ಟಿರುವುದು ಸಾವಿಗೆ ಕಾರಣ ಎನ್ನಲಾಗದ್ದು ಉದ್ವಿಗ್ನ ಪರಿಸ್ಹಿತಿ ನಿರ್ಮಾಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvxyscgfgzzzqmf3jw7ews4s,imgname-----------------------2026-06-25t043016.213-1782343053839.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿಯ ಹಿಂಡಾಲ್ಕೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಕಾರ್ಮಿಕ ಡೆತ್ ನೋಟ್ ಬರೆದಿಟ್ಟು ಕಂಪನಿಯ ಆವರಣದಲ್ಲೇ ಮೃತಪಟ್ಟಿದ್ದಾನೆ, ಹೊಸ ಕಾರ್ಮಿಕರ ನೇಮಕ, ಕೆಲಸ ಮುಂದುವರಿಸಲು 5 ಲಕ್ಷಕ್ಕೆ ಬೇಡಿಕೆ ಇಟ್ಟಿರುವುದು ಸಾವಿಗೆ ಕಾರಣ ಎನ್ನಲಾಗದ್ದು ಉದ್ವಿಗ್ನ ಪರಿಸ್ಹಿತಿ ನಿರ್ಮಾಣವಾಗಿದೆ.&lt;/p&gt;&lt;img&gt;&lt;p&gt;ನಗರದ ಹೊರವಲಯದಲ್ಲಿರುವ ಹಿಂಡಾಲ್ಕೋ ಕಂಪನಿ(Hindalco company)ಯ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಘಟನೆ ಬಳಿಕ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ನೂರಾರು ಜನರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;img&gt;&lt;p&gt;ಬೆಳಗಾವಿ ತಾಲೂಕಿನ ಮುತ್ತ್ಯಾನಟ್ಟಿ ಗ್ರಾಮದ ನಿವಾಸಿ ಶಂಕರ ತಳವಾರ (24) ಆತ್ಮ೧ಹತ್ಯೆ ಮಾಡಿಕೊಂಡ ಕಾರ್ಮಿಕ. ಸಾಯುವುದಕ್ಕೆ ಮುನ್ನ ಶಂಕರ ವಾಟ್ಸಾಪ್ ಸ್ಟೇಟಸ್&zwnj;ನಲ್ಲಿ ಡೆತ್ ನೋಟ್ ಹಾಕಿಕೊಂಡಿದ್ದಾನೆ.&amp;nbsp;&lt;/p&gt;&lt;img&gt;&lt;p&gt;ಅದರಲ್ಲಿ ಕಂಪನಿಯಲ್ಲಿ ಹಳೆಯ ಕಾರ್ಮಿಕರನ್ನು ತೆಗೆದು ಹೊಸ ಕಾರ್ಮಿಕರನ್ನು ನೇಮಕ ಮಾಡಲಾಗುತ್ತಿದೆ. ಗುತ್ತಿಗೆದಾರ ಪೈಯಾಲ್ ನಂದಿ ತನ್ನ ಮೇಲೆ ಅನ್ಯಾಯ ಮಾಡಿದ್ದು, ಕೆಲಸ ಮುಂದುವರಿಸಬೇಕಾದರೆ ₹5 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.&lt;/p&gt;&lt;img&gt;&lt;p&gt;ಶಂಕರ್ ತಳವಾರ ಸಾವಿಗೆ ಕಂಪನಿ ಕಾರಣ ಎಂದು ಅಕ್ರೋಶಗೊಂಡಿರವ ಕುಟುಂಬಸ್ಥರು, ಕಾರ್ಮಿಕರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಿಸಲು ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ ಮಾಡಿದೆ.&lt;/p&gt;&lt;img&gt;&lt;p&gt;&amp;nbsp;ಆಯುಕ್ತ ಭೂಷಣ ಬೊರಸೆ, ಶಾಸಕ ಆಸೀಫ್ ಸೇಠ್ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/tension-at-belagavi-hindalco-plant-after-worker-s-death-over-alleged-rs-5-lakh-bribe-demand-rav-0nlggqm"/>
        </item>
        <item>
            <title><![CDATA[ಬೆಳಗಾವಿ ಪರ ಗೊತ್ತುವಳಿ ನಿರ್ಧಾರದಿಂದ ದೂರುಳಿಯಿತೇ ಪಾಲಿಕೆ? ಹೊಸ ಚರ್ಚೆ ಹುಟ್ಟುಹಾಕಿದ ಮೇಯರ್ ಪತ್ರ !]]></title>
            <link>https://kannada.asianetnews.com/karnataka-districts/belagavi-resolution-row-mayor-s-letter-sparks-fresh-debate-rav/articleshow-1v5b9ih</link>
            <guid isPermaLink="true">https://kannada.asianetnews.com/karnataka-districts/belagavi-resolution-row-mayor-s-letter-sparks-fresh-debate-rav/articleshow-1v5b9ih</guid>
            <pubDate>Fri, 19 Jun 2026 11:05:20 +0530</pubDate>
            <description><![CDATA[ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಸಭೆಯಲ್ಲಿ ಅಂಗೀಕರಿಸಲು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ, ಮೇಯರ್ ಅವರು ಕಾನೂನು ಅಭಿಪ್ರಾಯ ಕೇಳಿ ಸರ್ಕಾರಕ್ಕೆ ಪತ್ರ ಬರೆದಿದ್ದು, ನ್ಯಾಯಾಲಯದ ಪ್ರಕರಣವನ್ನು ಉಲ್ಲೇಖಿಸಿರುವುದು ಹೊಸ ಚರ್ಚೆ ಮತ್ತು ವಿಳಂಬಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvf5wjdffm3nzz82etg5wpaf,imgname----------------------15--1781847181743.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶ್ರೀಶೈಲ ಮಠದ&lt;/strong&gt;&lt;/p&gt;&lt;p&gt;&lt;strong&gt;ಬೆಳಗಾವಿ (ಜೂ.19)&lt;/strong&gt;: ಬೆಳಗಾವಿ(Belagavi) ಕರ್ನಾಟಕ(Karnataka)ದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಸಭೆ(Belgavi Municipal Corporation Meeting)ಯಲ್ಲಿ ಅಂಗೀಕರಿಸುವಂತೆ ಕನ್ನಡಪರ ಸಂಘಟನೆಗಳು ಕಳೆದ ಹಲವು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿವೆ. ಪ್ರತಿಭಟನೆಗಳು, ಧರಣಿಗಳು, ಮನವಿಗಳು, ಜಾಗೃತಿ ಸಭೆಗಳು, ಪ್ರಾದೇಶಿಕ ಆಯುಕ್ತರಿಗೆ ಪ್ರತಿದಿನ ಮನವಿ ಸಲ್ಲಿಸುವ ಅಭಿಯಾನ ಸೇರಿದಂತೆ ವಿವಿಧ ರೀತಿಯಲ್ಲಿ ಒತ್ತಡ ಹೇರಿದರೂ ಈವರೆಗೆ ಪಾಲಿಕೆಯಲ್ಲಿ ನಿರ್ಣಯ ಮಂಡನೆಯಾಗಿಲ್ಲ. ಇದೀಗ ಮೇಯರ್ ಪ್ರೀತಿ ಕಾಮಕರ(Mayor Preeti Kamakara) ಅವರ ಪತ್ರ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;p&gt;ಜೂ.12ರಂದು ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿಯವರಿಗೆ ಬರೆದ ಪತ್ರದಲ್ಲಿ, ಕನ್ನಡಪರ ಸಂಘಟನೆಗಳು ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ವಿಷಯವನ್ನು ಪಾಲಿಕೆ ಸಭೆಯಲ್ಲಿ ಠರಾವಾಗಿ ಮಂಡಿಸುವಂತೆ ಮನವಿ ಮಾಡಿರುವುದಾಗಿ ಮೇಯರ್ ಉಲ್ಲೇಖಿಸಿದ್ದಾರೆ. ಆದರೆ, ಈ ಕುರಿತು ಕಾನೂನು ಅಭಿಪ್ರಾಯ ಪಡೆಯಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ, ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿರುವುದರಿಂದ ಎಚ್ಚರಿಕೆಯಿಂದ ನಡೆದುಕೊಳ್ಳಬೇಕಿದೆ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಇಲ್ಲಿಯೇ ಪ್ರಮುಖ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಕರ್ನಾಟಕದ ಭಾಗ ಎನ್ನುವುದು ಹೊಸದಾಗಿ ನಿರ್ಧರಿಸಬೇಕಾದ ವಿಚಾರವೇ? ಇದಕ್ಕಾಗಿ ಪ್ರತ್ಯೇಕ ಕಾನೂನು ಅಭಿಪ್ರಾಯ ಪಡೆಯುವ ಅಗತ್ಯವಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.&lt;/p&gt;&lt;p&gt;1956ರ ರಾಜ್ಯಗಳ ಪುನರ್&zwnj;ರಚನೆ ಬಳಿಕ ಬೆಳಗಾವಿ ಜಿಲ್ಲೆ ಕರ್ನಾಟಕದ ಆಡಳಿತ ವ್ಯಾಪ್ತಿಗೆ ಸೇರಿದೆ. ಅಂದಿನಿಂದ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನ್ಯಾಯಾಂಗ, ಮಹಾನಗರ ಪಾಲಿಕೆ, ಶಿಕ್ಷಣ ಸಂಸ್ಥೆಗಳು, ತೆರಿಗೆ ವ್ಯವಸ್ಥೆ, ಚುನಾವಣೆಗಳು ಸೇರಿದಂತೆ ಎಲ್ಲ ಆಡಳಿತಾತ್ಮಕ ಚಟುವಟಿಕೆಗಳು ಕರ್ನಾಟಕ ಸರ್ಕಾರದ ಅಧೀನದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ.&lt;/p&gt;&lt;h2&gt;2ನೇ ರಾಜಧಾನಿಯಾದ ಬೆಳಗಾವಿ&lt;/h2&gt;&lt;p&gt;ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನಗಳು ನಡೆಯುತ್ತಿವೆ. ಸುವರ್ಣ ವಿಧಾನಸೌಧ ನಿರ್ಮಾಣವಾಗಿದೆ. ರಾಜ್ಯದ ಎರಡನೇ ರಾಜಧಾನಿ ಎಂಬ ಸ್ಥಾನಮಾನವೂ ದೊರೆತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬೆಳಗಾವಿ ಕರ್ನಾಟಕದ ಭಾಗವೇ ಎಂಬುವುದನ್ನು ಮತ್ತೊಮ್ಮೆ ನಿರ್ಧರಿಸಬೇಕಾದ ಪ್ರಶ್ನೆಯೇ ಇಲ್ಲ ಎಂಬುದು ಕಾನೂನು ತಜ್ಞರು ಹಾಗೂ ಕನ್ನಡಪರ ಸಂಘಟನೆಗಳ ಅಭಿಪ್ರಾಯ.&lt;/p&gt;&lt;p&gt;ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸುಪ್ರೀಂನಲ್ಲಿ ವಿಚಾರಣೆಯಲ್ಲಿದೆ. ಆದರೆ, ಆ ವಿಚಾರಣೆಯ ಅರ್ಥ ಬೆಳಗಾವಿ ಕರ್ನಾಟಕದ ಆಡಳಿತ ವ್ಯಾಪ್ತಿಯಿಂದ ಹೊರಗಿದೆ ಎಂಬುದಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ ಎಂಬ ಕಾರಣಕ್ಕೆ ಸ್ಥಳೀಯ ಸಂಸ್ಥೆಗಳು ತಮ್ಮ ಸಾಂಕೇತಿಕ ಮತ್ತು ಭಾವನಾತ್ಮಕ ನಿಲುವನ್ನು ವ್ಯಕ್ತಪಡಿಸಬಾರದು ಎಂಬ ಯಾವುದೇ ಕಾನೂನು ನಿರ್ಬಂಧ ಇಲ್ಲ ಎಂದು ಕಾನೂನು ತಜ್ಞರು ಹೇಳುತ್ತಾರೆ. ದೇಶದ ವಿವಿಧ ಭಾಗಗಳಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಅಭಿಪ್ರಾಯವನ್ನು ಗೊತ್ತುವಳಿಗಳ ಮೂಲಕ ದಾಖಲಿಸುವ ಪದ್ಧತಿ ಇದೆ. ಇಂತಹ ಗೊತ್ತುವಳಿಗಳು ಕಾನೂನುಬದ್ಧ ಗಡಿ ಬದಲಾವಣೆ ಮಾಡುವುದಿಲ್ಲ. ಅವು ಸಂಬಂಧಿತ ಸಂಸ್ಥೆಯ ನಿಲುವಿನ ದಾಖಲೆಯಾಗಿರುತ್ತವೆ.&lt;/p&gt;&lt;h3&gt;ಕಾನೂನು ಅಭಿಪ್ರಾಯದ ಅಗತ್ಯವೇನು?:&lt;/h3&gt;&lt;p&gt;ಕನ್ನಡಪರ ಸಂಘಟನೆಗಳು ಈಗ ಇದೇ ಪ್ರಶ್ನೆಯನ್ನು ಕೇಳುತ್ತಿವೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಮಾತು ಸಂವಿಧಾನ ವಿರೋಧಿಯೂ ಅಲ್ಲ, ಕಾನೂನು ಬಾಹಿರವೂ ಅಲ್ಲ. ಇದು ಈಗಿರುವ ಆಡಳಿತಾತ್ಮಕ ವಾಸ್ತವವನ್ನು ಪುನರುಚ್ಚರಿಸುವ ಹೇಳಿಕೆಯಷ್ಟೇ. ಆದರೆ, ಸರ್ಕಾರಕ್ಕೆ ಪತ್ರ ಬರೆದು ಕಾನೂನು ಅಭಿಪ್ರಾಯ ಕೇಳುವುದು ಹಾಗೂ ನ್ಯಾಯಾಲಯದ ವಿಚಾರಣೆಯನ್ನು ಮುಂದಿಡುವುದು ನೇರ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡುವ ಪ್ರಯತ್ನದಂತೆ ಕಾಣುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹಿಂದೆ ಗಡಿ, ಭಾಷೆ ಮತ್ತು ಗುಂಪುಗಾರಿಕೆಯ ಆಧಾರದ ಮೇಲೆ ಚುನಾವಣೆಗಳು ನಡೆಯುತ್ತಿದ್ದವು. ಆದರೆ ಈಗ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಸ್ಪಷ್ಟ ಬಹುಮತ ಹೊಂದಿದೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದೆ. ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು ಕನ್ನಡಿಗರಾಗಿರುವುದು ವಿಶೇಷ. ಆದ್ದರಿಂದ ಈ ಅವಧಿಯಲ್ಲೇ ಕನ್ನಡಪರ ಗೊತ್ತುವಳಿಯನ್ನು ಅಂಗೀಕರಿಸಬೇಕು ಎಂಬುದು ಕನ್ನಡಪರ ಸಂಘಟನೆಗಳ ಪ್ರಮುಖ ಒತ್ತಾಯವಾಗಿದೆ.ನಿರಂತರ ಹೋರಾಟ:&lt;/p&gt;&lt;p&gt;ಕಳೆದ ಮಾರ್ಚ್ 26ರಿಂದ ಕನ್ನಡಪರ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಅಂಗೀಕರಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳು, ಮನವಿಗಳು, ಸಭೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಪ್ರಾದೇಶಿಕ ಆಯುಕ್ತರಿಗೆ ಪ್ರತಿದಿನ ಮನವಿ ಸಲ್ಲಿಸುವ ಅಭಿಯಾನವನ್ನೂ ಆರಂಭಿಸಿವೆ. ಸಂಘಟನೆಗಳ ಅಭಿಪ್ರಾಯದಲ್ಲಿ, ಈ ನಿರ್ಣಯ ಕೇವಲ ರಾಜಕೀಯ ಪ್ರಸ್ತಾವನೆಯಲ್ಲ. ಇದು ಗಡಿನಾಡಿನ ಕನ್ನಡಿಗರ ಭಾವನೆಗೆ ಗೌರವ ಸಲ್ಲಿಸುವ, ಬೆಳಗಾವಿ ಕುರಿತು ಪಾಲಿಕೆಯ ಅಧಿಕೃತ ನಿಲುವನ್ನು ದಾಖಲಿಸುವ ಮತ್ತು ಮುಂದಿನ ಪೀಳಿಗೆಗೆ ಐತಿಹಾಸಿಕ ದಾಖಲೆಯಾಗಿ ಉಳಿಯುವ ಮಹತ್ವದ ನಿರ್ಣಯವಾಗಿದೆ.&lt;/p&gt;&lt;h3&gt;ಎಲ್ಲರ ಚಿತ್ತ ಪಾಲಿಕೆ ಸಭೆಯತ್ತ:&lt;/h3&gt;&lt;p&gt;ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿರುವ ಸಂದರ್ಭದಲ್ಲಿ, ವಿಧಾನಮಂಡಲ ಅಧಿವೇಶನಗಳಿಗೆ ಆತಿಥ್ಯ ನೀಡುತ್ತಿರುವ ಸಂದರ್ಭದಲ್ಲಿ ಹಾಗೂ ರಾಜ್ಯದ ಆಡಳಿತ ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿ ಬೆಳೆದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಮಂಡಿಸಲು ಇನ್ನೂ ಏಕೆ ಹಿಂಜರಿಕೆ ಎಂಬ ಪ್ರಶ್ನೆ ತೀವ್ರವಾಗಿದೆ. ಕಾನೂನು ಅಭಿಪ್ರಾಯ ಮತ್ತು ನ್ಯಾಯಾಲಯದ ನೆಪಗಳು ಮುಂದುವರಿಯುತ್ತವೆಯೇ? ಅಥವಾ ಮಹಾನಗರ ಪಾಲಿಕೆ ತನ್ನ ಸ್ಪಷ್ಟ ನಿಲುವನ್ನು ದಾಖಲಿಸಿ ಐತಿಹಾಸಿಕ ಹೆಜ್ಜೆ ಇಡುತ್ತದೆಯೇ? ಎಂಬ ಕುತೂಹಲ ಈಗ ಗಡಿನಾಡಿನ ಜನರಲ್ಲಿ ಹೆಚ್ಚಾಗಿದೆ.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದು ಚರ್ಚೆಯ ವಿಷಯವಲ್ಲ, ಅದು ಐತಿಹಾಸಿಕ ಮತ್ತು ಆಡಳಿತಾತ್ಮಕ ಸತ್ಯ. ಮಹಾನಗರ ಪಾಲಿಕೆ ಈ ಕುರಿತು ಸ್ಪಷ್ಟ ನಿಲುವು ದಾಖಲಿಸಿ ಕನ್ನಡಿಗರ ಭಾವನೆಗೆ ಗೌರವ ಸಲ್ಲಿಸಬೇಕು.&lt;/p&gt;&lt;p&gt;ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠ ಬೆಳಗಾವಿ.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಈ ಸತ್ಯವನ್ನು ಗೊತ್ತುವಳಿಯ ಮೂಲಕ ಪುನರುಚ್ಚರಿಸುವುದು ಯಾರ ವಿರುದ್ಧದ ಹೋರಾಟವಲ್ಲ. ಕಾನೂನು ನೆಪಗಳ ಹಿಂದೆ ಅಡಗಿಕೊಳ್ಳುವ ಬದಲು ಮಹಾನಗರ ಪಾಲಿಕೆ ತನ್ನ ಸ್ಪಷ್ಟ ನಿಲುವನ್ನು ಪ್ರಕಟಿಸಬೇಕು.&lt;/p&gt;&lt;p&gt;ಅಶೋಕ ಚಂದರಗಿ, ಹಿರಿಯ ಕನ್ನಡ ಹೋರಾಟಗಾರ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-resolution-row-mayor-s-letter-sparks-fresh-debate-rav/articleshow-1v5b9ih"/>
        </item>
        <item>
            <title><![CDATA[ಗ್ಯಾರಂಟಿ ಪರಿಷ್ಕರಣೆ ಮಧ್ಯೆ ರಾಜ್ಯದ 16 ಲಕ್ಷ ಜನರ ಪಿಂಚಣಿ ಸ್ಥಗಿತ! ಕಚೇರಿಯಿಂದ ಕಚೇರಿಗೆ ಅಲೆಯುತ್ತಿರುವ ವೃದ್ಧರು!]]></title>
            <link>https://kannada.asianetnews.com/state/karnataka-pension-shock-why-16-lakh-beneficiaries-are-not-getting-monthly-pensions-gdp/articleshow-3oeaonr</link>
            <guid isPermaLink="true">https://kannada.asianetnews.com/state/karnataka-pension-shock-why-16-lakh-beneficiaries-are-not-getting-monthly-pensions-gdp/articleshow-3oeaonr</guid>
            <pubDate>Wed, 17 Jun 2026 12:41:12 +0530</pubDate>
            <description><![CDATA[ಕರ್ನಾಟಕ ಸರ್ಕಾರವು ಪರಿಶೀಲನೆಯ ನೆಪದಲ್ಲಿ ಸುಮಾರು 16 ಲಕ್ಷ ಫಲಾನುಭವಿಗಳ ಮಾಸಿಕ ಪಿಂಚಣಿಯನ್ನು ಸ್ಥಗಿತಗೊಳಿಸಿದೆ. ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲರಂತಹ ಸಾಮಾಜಿಕ ಭದ್ರತಾ ಯೋಜನೆಗಳ ಹಣ ಕಳೆದ ಮೂರು ತಿಂಗಳಿಂದ ನಿಂತುಹೋಗಿದ್ದು, ಬಡವರು ಮತ್ತು ಅಸಹಾಯಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k38860vgzn4ast8mffce4zr2,imgname-welfare-pension-1755844903792.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ನೀಡುತ್ತಿದ್ದ ಮಾಸಿಕ ಪಿಂಚಣಿಯನ್ನು (ಮಾಸಾಶನ) ದಿಢೀರನೆ ಸ್ಥಗಿತಗೊಳಿಸಿರುವುದು ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಂತಹ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ನಡುವೆಯೇ, ಬಡವರು ಹಾಗೂ ಅಸಹಾಯಕರ ಹೊಟ್ಟೆಯ ಮೇಲೆ ಹೊಡೆದಂತಾಗಿದೆ. ಕಳೆದ ಮೂರು ತಿಂಗಳಿಂದ ರಾಜ್ಯದ ಸುಮಾರು 16 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಹಣ ತಲುಪುತ್ತಿಲ್ಲ. ರಾಜ್ಯದಲ್ಲಿನ ಈ ಪಿಂಚಣಿ ಸ್ಥಗಿತದ ಸಂಪೂರ್ಣ ವಿವರ, ಕಾರಣಗಳು ಮತ್ತು ಇದರಿಂದ ಜನಸಾಮಾನ್ಯರ ಮೇಲಾಗಿರುವ ಪರಿಣಾಮಗಳ ಕುರಿತಾದ ಸಮಗ್ರ ವರದಿ ಇಲ್ಲಿದೆ.&lt;/p&gt;&lt;h2&gt;16 ಲಕ್ಷ ಜನರಿಗೆ ಬಿಗ್ ಶಾಕ್: ಯಾರೆಲ್ಲ ಸಂಕಷ್ಟದಲ್ಲಿದ್ದಾರೆ?&lt;/h2&gt;&lt;p&gt;ರಾಜ್ಯದಲ್ಲಿ ಒಟ್ಟು 82.71 ಲಕ್ಷ ಪಿಂಚಣಿ ಫಲಾನುಭವಿಗಳಿದ್ದಾರೆ. ಇವರಲ್ಲಿ ಅರ್ಹರಲ್ಲದವರನ್ನು ಪತ್ತೆಹಚ್ಚುವ ನೆಪದಲ್ಲಿ ಸರ್ಕಾರವು ಬರೋಬ್ಬರಿ 16 ಲಕ್ಷ ಜನರನ್ನು ಪಿಂಚಣಿ ಪಟ್ಟಿಯಿಂದ ಕೈಬಿಟ್ಟಿದೆ. ಸರ್ಕಾರದ ಈ ದಿಢೀರ್ ನಿರ್ಧಾರದಿಂದಾಗಿ ಕೆಳಗಿನ ಯೋಜನೆಗಳ ಆಶ್ರಯ ಪಡೆದಿದ್ದವರು ಬೀದಿಗೆ ಬೀಳುವಂತಾಗಿದೆ.&lt;/p&gt;&lt;ul&gt; &lt;li&gt;ವೃದ್ಧಾಪ್ಯ ವೇತನ (ಹಿರಿಯ ನಾಗರಿಕರು)&lt;/li&gt; &lt;li&gt;ವಿಧವಾ ಪಿಂಚಣಿ (ಪತಿಯನ್ನು ಕಳೆದುಕೊಂಡ ಮಹಿಳೆಯರು)&lt;/li&gt; &lt;li&gt;ಸಂಧ್ಯಾ ಸುರಕ್ಷಾ ಯೋಜನೆ&lt;/li&gt; &lt;li&gt;ವಿಕಲಾಂಗರ ಪಿಂಚಣಿ&lt;/li&gt;&lt;/ul&gt;&lt;p&gt;ಪ್ರತಿ ತಿಂಗಳು ಈ 82 ಲಕ್ಷ ಫಲಾನುಭವಿಗಳ ಪಿಂಚಣಿಗಾಗಿ ಸರ್ಕಾರ ಸುಮಾರು 400 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿತ್ತು. ಆದರೆ, ಈಗ 16 ಲಕ್ಷ ಜನರಿಗೆ ಕೊಕ್ ನೀಡಿರುವುದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 150 ಕೋಟಿ ರೂಪಾಯಿಗಳ ಬೃಹತ್ ಮೊತ್ತ ಉಳಿತಾಯವಾಗುತ್ತಿದೆ.&lt;/p&gt;&lt;h2&gt;ಪಿಂಚಣಿ ಸ್ಥಗಿತಗೊಳ್ಳಲು ಮುಖ್ಯ ಕಾರಣಗಳೇನು?&lt;/h2&gt;&lt;p&gt;ಸರ್ಕಾರದ ವತಿಯಿಂದ ನಡೆಸಲಾದ ಇಲಾಖಾ ಪರಿಶೀಲನೆ ಹಾಗೂ ತಾಂತ್ರಿಕ ಕಾರಣಗಳಿಂದಾಗಿ ಈ ಪಿಂಚಣಿಯನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಮುಖ್ಯ ಕಾರಣಗಳು ಕೂಡ ನೀಡಲಾಗಿದೆ.&lt;/p&gt;&lt;p&gt;&lt;strong&gt;ವಿಳಾಸ ಬದಲಾವಣೆ: &lt;/strong&gt;ಪಿಂಚಣಿಗೆ ಅರ್ಜಿ ಸಲ್ಲಿಸುವಾಗ ನೀಡಿದ್ದ ವಿಳಾಸದಲ್ಲಿ ಸದ್ಯಕ್ಕೆ ವಾಸವಿಲ್ಲದ ಕಾರಣಕ್ಕಾಗಿ 2.21 ಲಕ್ಷ ಜನರ ಪಿಂಚಣಿ ರದ್ದಾಗಿದೆ.&lt;/p&gt;&lt;p&gt;&lt;strong&gt;ಆದಾಯ ಪ್ರಮಾಣ ಪತ್ರದ ಕೊರತೆ: &lt;/strong&gt;ಕಾಲಮಿತಿಯೊಳಗೆ ಹೊಸ ಆದಾಯ ಪ್ರಮಾಣ ಪತ್ರವನ್ನು (Income Certificate) ಸಲ್ಲಿಸದ ಕಾರಣಕ್ಕೆ 45,853 ಜನರಿಗೆ ಪಿಂಚಣಿ ನಿಲ್ಲಿಸಲಾಗಿದೆ.&lt;/p&gt;&lt;p&gt;&lt;strong&gt;ದಾಖಲೆಗಳ ಕೊರತೆ: &lt;/strong&gt;ಭೌತಿಕ ಪರಿಶೀಲನೆ (Physical Verification) ನಡೆಸುವಾಗ ಸೂಕ್ತ ಮತ್ತು ನಿಖರವಾದ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಅಂದರೆ 13,23,932 ಜನರ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿದೆ.&lt;/p&gt;&lt;h2&gt;ಜಿಲ್ಲಾವಾರು ಸ್ಥಗಿತಗೊಂಡ ಪಿಂಚಣಿದಾರರ ವಿವರ&lt;/h2&gt;&lt;p&gt;ರಾಜ್ಯದ ಕೆಲವು ಪ್ರಮುಖ ಜಿಲ್ಲೆಗಳಲ್ಲಿ ಪಿಂಚಣಿ ಕಳೆದುಕೊಂಡವರ ಸಂಖ್ಯೆ ಅತ್ಯಂತ ಹೆಚ್ಚಾಗಿದ್ದು, ಆ ವಿವರಗಳು ಹೀಗಿವೆ:&lt;/p&gt;&lt;p&gt;ಜಿಲ್ಲೆ ಪಿಂಚಣಿ ಕಳೆದುಕೊಂಡವರ ಸಂಖ್ಯೆ&lt;/p&gt;&lt;ul&gt; &lt;li&gt;ಬೆಳಗಾವಿ 1,38,215 ಜನರು&lt;/li&gt; &lt;li&gt;ಮೈಸೂರು 1,06,305 ಜನರು&lt;/li&gt; &lt;li&gt;ದಾವಣಗೆರೆ 95,297 ಜನರು&lt;/li&gt; &lt;li&gt;ರಾಯಚೂರು 90,995 ಜನರು&lt;/li&gt;&lt;/ul&gt;&lt;h2&gt;ಪ್ರಸ್ತುತ ಪಿಂಚಣಿ ದರಗಳು (ಯಾರಿಗೆ ಎಷ್ಟು ಸಿಗುತ್ತಿತ್ತು?)&lt;/h2&gt;&lt;p&gt;ಸರ್ಕಾರವು ವಿವಿಧ ವರ್ಗದ ಜನರಿಗೆ ನೀಡುತ್ತಿದ್ದ ಮಾಸಿಕ ಆರ್ಥಿಕ ನೆರವಿನ ವಿವರ ಹೀಗಿದೆ.&lt;/p&gt;&lt;p&gt;&lt;strong&gt;ವಿಧವಾ ವೇತನ:&lt;/strong&gt; ಪ್ರತಿ ತಿಂಗಳು 800 ರೂಪಾಯಿಗಳು.&lt;/p&gt;&lt;p&gt;&lt;strong&gt;ವೃದ್ಧಾಪ್ಯ ಪಿಂಚಣಿ:&lt;/strong&gt; 60 ರಿಂದ 65 ವರ್ಷದೊಳಗಿನವರಿಗೆ 800 ರೂಪಾಯಿ ಹಾಗೂ 65 ವರ್ಷ ಮೇಲ್ಪಟ್ಟವರಿಗೆ 1,200 ರೂಪಾಯಿಗಳು.&lt;/p&gt;&lt;p&gt;&lt;strong&gt;ವಿಕಲಾಂಗರ ಪಿಂಚಣಿ:&lt;/strong&gt;&lt;/p&gt;&lt;p&gt;25% ವಿಕಲಾಂಗ ಹೊಂದಿರುವವರಿಗೆ: 800 ರೂಪಾಯಿಗಳು.&lt;/p&gt;&lt;p&gt;50% ವಿಕಲಾಂಗ ಹೊಂದಿರುವವರಿಗೆ: 1,200 ರೂಪಾಯಿಗಳು.&lt;/p&gt;&lt;p&gt;75% ಕಿಂತ ಹೆಚ್ಚು ವಿಕಲಾಂಗ ಹೊಂದಿರುವವರಿಗೆ: 2,000 ರೂಪಾಯಿಗಳು.&lt;/p&gt;&lt;h2&gt;ಕಚೇರಿಗಳಿಗೆ ಅಲೆಯುತ್ತಿರುವ ವೃದ್ಧರು!&lt;/h2&gt;&lt;p&gt;ಮೂರು ತಿಂಗಳಾಯಿತು ಸರ್, ಕೈಗೆ ಒಂದು ರೂಪಾಯಿ ಪಿಂಚಣಿ ಹಣ ಬಂದಿಲ್ಲ. ನೆಮ್ಮದಿ ಕೇಂದ್ರ, ತಹಶೀಲ್ದಾರ್ ಕಚೇರಿ ಅಂತ ಕೇಳಿದ್ರೆ 'ಆ ಆಫೀಸ್&zwnj;ಗೆ ಹೋಗಿ, ಈ ಆಫೀಸ್&zwnj;ಗೆ ಹೋಗಿ' ಅಂತ ಅಲೆದಾಡಿಸುತ್ತಿದ್ದಾರೆ. ವಯಸ್ಸಾದ ಕಾಲದಲ್ಲಿ ನಮಗೆ ನಡೆದಾಡಲು ಶಕ್ತಿಯಿಲ್ಲ. ಬದುಕು ಸಾಗಿಸುವುದು ತುಂಬಾ ಕಷ್ಟವಾಗಿದೆ. ಎಂದು ಪಿಂಚಣಿ ಕಳೆದುಕೊಂಡ ಹಿರಿಯ ನಾಗರಿಕರ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;p&gt;ತಮ್ಮ ದೈನಂದಿನ ಮನೆ ಖರ್ಚಿಗೆ, ಕೈಗೊಂದು ಮಾತ್ರೆ-ಔಷಧಿ ಖರೀದಿಸಲು ಈ ಪಿಂಚಣಿ ಹಣವನ್ನೇ ನಂಬಿಕೊಂಡಿದ್ದ ಅಸಹಾಯಕ ವೃದ್ಧರು, ಅಂಗವಿಕಲರು ಮತ್ತು ವಿಧವೆಯರು ಸರ್ಕಾರದ ಈ ಕ್ರಮದಿಂದ ಕಂಗಾಲಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗ್ಯಾರಂಟಿ ಯೋಜನೆಗಳ ಹೊಂದಾಣಿಕೆಗಾಗಿ ಬಡವರ ಪಿಂಚಣಿಗೆ ಕತ್ತರಿ ಹಾಕಲಾಗಿದೆಯೇ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ತಕ್ಷಣವೇ ಪಿಂಚಣಿ ಬಿಡುಗಡೆ ಮಾಡಬೇಕೆಂಬುದು ಸಂತ್ರಸ್ತರ ತೀವ್ರ ಒತ್ತಾಯವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-pension-shock-why-16-lakh-beneficiaries-are-not-getting-monthly-pensions-gdp/articleshow-3oeaonr"/>
        </item>
        <item>
            <title><![CDATA[2010ರ ಮೇ 23ಕ್ಕೂ ಮುಂಚೆ ನೇಮಕಗೊಂಡು ಸೇವೆಯಲ್ಲಿರುವ ಶಿಕ್ಷಕರಿಗೆ ಸಿಗುತ್ತಾ ವಿನಾಯ್ತಿ?]]></title>
            <link>https://kannada.asianetnews.com/karnataka-districts/are-karnataka-government-teachers-appointed-and-in-service-before-may-23-2010-exempted-from-the-tet-exam-mrq/articleshow-6dxos71</link>
            <guid isPermaLink="true">https://kannada.asianetnews.com/karnataka-districts/are-karnataka-government-teachers-appointed-and-in-service-before-may-23-2010-exempted-from-the-tet-exam-mrq/articleshow-6dxos71</guid>
            <pubDate>Sun, 21 Jun 2026 12:19:51 +0530</pubDate>
            <description><![CDATA[2010ರ ಮೇ 23ಕ್ಕೂ ಮೊದಲು ನೇಮಕವಾದ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯಿಂದ ವಿನಾಯತಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಈ ನಿಯಮವು ಲಕ್ಷಾಂತರ ಶಿಕ್ಷಕರ ಸೇವೆಗೆ ಕುತ್ತು ತರಲಿದೆ ಎಂದು ಆತಂಕ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kvmf1vsdpznq1ype7cgk4fyh,imgname-teachers-1782024564525.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; 2010ರ ಮೇ 23ಕ್ಕೂ ಮುಂಚೆ ನೇಮಕಗೊಂಡು ಸೇವೆಯಲ್ಲಿರುವ ಲಕ್ಷಾಂತರ ಶಿಕ್ಷಕರನ್ನು ಟಿಇಟಿ ಪರೀಕ್ಷೆಯಿಂದ ವಿನಾಯತಿ ನೀಡಿ ಸೇವೆಯಲ್ಲಿ ಮುಂದುವರಿಸಬೇಕೆಂದು ಆಗ್ರಹಿಸಿ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.&lt;/p&gt;&lt;p&gt;ಸುಪ್ರೀಂಕೋರ್ಟ್ ಮೇ 29, 2026ರಂದು ನೀಡಿದ ತೀರ್ಪು 2010ರ ಮೇ 23ಕ್ಕೂ ಮುಂಚೆ ನೇಮಕವಾಗಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಬಾರದು. 2010ರ ಮೇ 23ರ ಎನ್&zwnj;ಸಿಟಿಇ ನಿಯಮಾವಳಿ ಪ್ರಕಾರ ನೇಮಕಗೊಂಡ ಶಿಕ್ಷಕರಿಗೆ ಖಾಯಂ ಕಡ್ಡಾಯ ಅಗತ್ಯತೆಯಿಂದ ವಿನಾಯತಿ ನೀಡಿರುವುದು ಸಮರ್ಥನೀಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.&lt;/p&gt;&lt;h2&gt;&lt;strong&gt;ಲಕ್ಷಾಂತರ ಶಿಕ್ಷಕರ ಸೇವೆಗೆ ಕುತ್ತು&lt;/strong&gt;&lt;/h2&gt;&lt;p&gt;ಈ ತೀರ್ಪು ಹಿಂದಿನಿಂದಲೇ ಜಾರಿಯಾದರೇ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಲಕ್ಷಾಂತರ ಶಿಕ್ಷಕರ ಸೇವೆಗೆ ಕುತ್ತು ಬರಲಿದೆ. ಅವರ ಕುಟುಂಬ ಜೀವನ, ಪಾಲನೆ ಮತ್ತು ಶಿಕ್ಷಕರ ನೈತಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಶಿಕ್ಷಕರ ಸೇವಾ ಹಕ್ಕುಗಳು, ಹಿರಿತನ, ಬಡ್ತಿ ನಿರೀಕ್ಷೆಗಳು ಮತ್ತು ಇತರ ಕಾನೂನುಬದ್ಧ ಪ್ರಯೋಜನಗಳನ್ನು ರಕ್ಷಿಸಲು ಅಗತ್ಯವಾದ ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.&lt;/p&gt;&lt;p&gt;ಈ ವೇಳೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಚಂದಾನಂದ ಎಚ್.ಪಾಟೀಲ, ಜಿಲ್ಲಾ ಕಾರ್ಯಾಧ್ಯಕ್ಷ ಉಮೇಶ ಕುಲಕರ್ಣಿ ಸೇರಿದಂತೆ ಇತರರು ಇದ್ದರು.&lt;/p&gt;&lt;h3&gt;&lt;strong&gt;ಟಿಇಟಿ ಪರೀಕ್ಷೆಯಿಂದ ವಿನಾಯತಿ ನೀಡುವಂತೆ ಮನವಿ&lt;/strong&gt;&lt;/h3&gt;&lt;p&gt;2010ರ ಮೇ 23ಕ್ಕೂ ಮುಂಚೆ ನೇಮಕಗೊಂಡು ಸೇವೆಯಲ್ಲಿರುವ ಲಕ್ಷಾಂತರ ಶಿಕ್ಷಕರನ್ನು ಟಿಇಟಿ ಪರೀಕ್ಷೆಯಿಂದ ವಿನಾಯತಿ ನೀಡಿ ಸೇವೆಯಲ್ಲಿ ಮುಂದುವರಿಸಬೇಕೆಂದು ಆಗ್ರಹಿಸಿ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/are-karnataka-government-teachers-appointed-and-in-service-before-may-23-2010-exempted-from-the-tet-exam-mrq/articleshow-6dxos71"/>
        </item>
        <item>
            <title><![CDATA[Karnataka Politics: ಕುದುರೆ ವ್ಯಾಪಾರಿ ಡಿಕೆಶಿ ಚಾಣಕ್ಯನಾಗಲು ಹೇಗೆ ಸಾಧ್ಯ: ಆರ್.ಅಶೋಕ್ ಲೇವಡಿ]]></title>
            <link>https://kannada.asianetnews.com/karnataka-districts/r-ashok-slams-dk-shivakumar-chanakya-horse-trading-remarks-gvd/articleshow-6odsmco</link>
            <guid isPermaLink="true">https://kannada.asianetnews.com/karnataka-districts/r-ashok-slams-dk-shivakumar-chanakya-horse-trading-remarks-gvd/articleshow-6odsmco</guid>
            <pubDate>Mon, 22 Jun 2026 00:27:01 +0530</pubDate>
            <description><![CDATA[&lt;p&gt;Political Controversy: ಚಾಣಕ್ಯ ಎಂದೂ ಕುದುರೆ ವ್ಯಾಪಾರ ಮಾಡುತ್ತಿರಲಿಲ್ಲ. ಈಗ ಕುದುರೆ ವ್ಯಾಪಾರ ಮಾಡುವ ಡಿಕೆಶಿ ಚಾಣಕ್ಯ ಆಗಲು ಹೇಗೆ ಸಾಧ್ಯ ಎಂದು ಆರ್.ಅಶೋಕ್ ಲೇವಡಿ ಮಾಡಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvnn5hha7he5c8p3m0egt7tt,imgname-vhvh-1782064530986.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.22):&lt;/strong&gt; ಚಾಣಕ್ಯ ಎಂದೂ ಕುದುರೆ ವ್ಯಾಪಾರ ಮಾಡುತ್ತಿರಲಿಲ್ಲ. ಈಗ ಕುದುರೆ ವ್ಯಾಪಾರ ಮಾಡುವ ಡಿಕೆಶಿ ಚಾಣಕ್ಯ ಆಗಲು ಹೇಗೆ ಸಾಧ್ಯ ಎಂದು ಆರ್.ಅಶೋಕ್ ಲೇವಡಿ ಮಾಡಿದರು. ಪರಿಷತ್ ಚುನಾವಣೆ ಬಳಿಕ ಸಿಎಂ ಡಿಕೆಶಿ ತಂತ್ರ &zwnj;ಚಾಣಕ್ಯ ತಂತ್ರ ಎಂದು ಬಣ್ಣಿಸುತ್ತಿರುವ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಚಾಣಾಕ್ಷ ಯಾವೂರಿಗೆ..? ನಾವು 17 ಜನ ಶಾಸಕರನ್ನು ಕರೆದುಕೊಂಡು ಹೋದಾಗ ಈ ಚಾಣಕ್ಯ ಎಲ್ಲಿದ್ದ..? ಡಿಕೆಶಿ &zwnj;ಆಗ ಮಂತ್ರಿ ಇದ್ದರು, ಆಗ ನಮ್ಮ ಜೊತೆಗೆ ಅವರ ಶಾಸಕರು ಬಂದಿದ್ದರು ಎಂದು ತಿರುಗೇಟು ನೀಡಿದರು.&lt;/p&gt;&lt;p&gt;2019ರಲ್ಲಿ ಕಾಂಗ್ರೆಸ್ &zwnj;ಶಾಸಕರು ಮುಂಬೈಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಕುದುರೆ ವ್ಯಾಪಾರ ಅಂದಿದ್ದರು. ನಮ್ಮ ಜೊತೆಗೆ ಕಾಂಗ್ರೆಸ್ ಶಾಸಕರು ಬಂದಾಗ ಆಪರೇಷನ್ ಕಮಲ ಅಂತಾ ಹೇಳಿದ್ದೀರಿ. ಆಗ ನಮಗೆ ಬುದ್ಧಿ ಹೇಳ್ತಿರಾ? ಈಗ ನೀವು ಮಾಡಿದ್ದೇನು, ನಾಚಿಕೆ ಆಗಲ್ಲವಾ..? ಕಾಂಗ್ರೆಸ್&zwnj;ಗೆ ಇದು ತಿರುಗಬಾಣ ಆಗುತ್ತದೆ. ನಾವೇ ಉತ್ತರ ಕೊಡುತ್ತೇವೆ ಎಂದು ಆರ್.ಅಶೋಕ ಕೈ ಸವಾಲು ಹಾಕಿದರು.&lt;/p&gt;&lt;p&gt;ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ, ವಂಚನೆ ಬಗೆದಿರುವುದು ನಿಜ. ಯಾವ ಶಾಸಕ ದ್ರೋಹ ಮಾಡಿದ್ದಾರೆ ಗೊತ್ತಿಲ್ಲ. ಆ ಕಾರಣಕ್ಕೆ ಅಧ್ಯಕ್ಷರ ಜೊತೆಗೆ ಮಾತನಾಡುತ್ತೇವೆ. ಈ ವಿಚಾರವಾಗಿ ಚರ್ಚಿಸಲು ನಮ್ಮ ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಕುದುರೆ ವ್ಯಾಪಾರ, ಹಣದ ಹೊಳೆ ಹರಿಸಿರುವುದನ್ನು ತಿಳಿಸುತ್ತೇವೆ. ಪರಿಷತ್ &zwnj;ಚುನಾವಣೆಯಲ್ಲಿ ಈ ರೀತಿ ಮಾಡಿರುವುದು ಕಾಂಗ್ರೆಸ್&zwnj;ಗೆ ಒಳ್ಳೆಯದಲ್ಲ ಎಂದು ಆರ್.ಅಶೋಕ ಹರಿಹಾಯ್ದರು.&lt;/p&gt;&lt;h2&gt;&lt;strong&gt;ಆಣೆ ಪ್ರಮಾಣ&lt;/strong&gt;&lt;/h2&gt;&lt;p&gt;ವಿಧಾನ ಪರಿಷತ್&zwnj; ಚುನಾವಣೆಯಲ್ಲಿ ಅಡ್ಡ ಮತದಾನ ಹಿನ್ನೆಲೆ ಆಣೆ ಪ್ರಮಾಣ ಮಾಡಿಸಲು ಬಿಜೆಪಿ ಶಾಸಕರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗುವ ಸಂಬಂಧ ವಿಜಯೇಂದ್ರ ನನಗೆ ಫೋನ್ ಮಾಡಿದ್ದರು. ನಾಳೆ ಅವರನ್ನು ಭೇಟಿ ಆಗಿ, ಮಾತುಕತೆ ನಡೆಸುತ್ತೇನೆ.&zwnj; ವಿಜಯೇಂದ್ರ ಮತ್ತು ಹಿರಿಯರ ಜೊತೆಗೆ ಚರ್ಚಿಸಿದ ಬಳಿಕ ಸ್ಪಷ್ಟ ತೀರ್ಮಾನ ಮಾಡುತ್ತೇವೆ ಎಂದರು.&lt;/p&gt;&lt;p&gt;ಅಡ್ಡ ಮತದಾನ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ, ತಪ್ಪಿತಸ್ಥರಿಗೆ ಬುದ್ಧಿ ಕಲಿಸುತ್ತೇವೆ. ಕೇಂದ್ರ ನಾಯಕರ ಜೊತೆಗೆ ಗಂಭೀರವಾಗಿ ಚರ್ಚೆ ಮಾಡಿ ಕ್ರಮಕ್ಕೆ ಆಗ್ರಹಿಸುತ್ತೇವೆ. ಅಡ್ಡ ಮತದಾನ ಮಾಡಿದವರು ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೆ ಮಾಡುತ್ತೇವೆ ಎಂದು ಆರ್.ಅಶೋಕ&zwnj; ಖಡಕ್ ಎಚ್ಚರಿಕೆ ನೀಡಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/r-ashok-slams-dk-shivakumar-chanakya-horse-trading-remarks-gvd/articleshow-6odsmco"/>
        </item>
        <item>
            <title><![CDATA[belagavi Soldier murder: ದೇಶದ ಗಡಿ ಕಾಯುತ್ತಾ ಜನರ ಜೀವ ಕಾಪಾಡಿದ ಯೋಧನನ್ನ ವಿಮೆ ಹಣಕ್ಕಾಗಿ ಕೊಲೆ ಮಾಡಿದ ಹೆಂಡತಿ!]]></title>
            <link>https://kannada.asianetnews.com/karnataka-districts/belagavi-retired-soldier-murder-case-insurance-money-wife-lover-arrested/articleshow-ba0z5qe</link>
            <guid isPermaLink="true">https://kannada.asianetnews.com/karnataka-districts/belagavi-retired-soldier-murder-case-insurance-money-wife-lover-arrested/articleshow-ba0z5qe</guid>
            <pubDate>Mon, 15 Jun 2026 22:22:28 +0530</pubDate>
            <description><![CDATA[&lt;p&gt;ನಿವೃತ್ತ ಯೋಧ ಸಂದೀಪ ಮಂಜರಗಿ ಅವರ ಸಾವಿನ ಪ್ರಕರಣವು ಭಯಾನಕ ತಿರುವು ಪಡೆದಿದೆ. 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ, ಪತ್ನಿ ಸುಮಾ ತನ್ನ ಪ್ರಿಯಕರನೊಂದಿಗೆ ಸೇರಿ ಆಸ್ಪತ್ರೆಯಲ್ಲಿಯೇ ವಿಷ ನೀಡಿ ಪತಿಯನ್ನು ಹತ್ಯೆ ಮಾಡಿದ್ದಾಳೆ. ವಿಮೆ ಹಣ ಹಂಚಿಕೆ ಜಗಳದಿಂದಾಗಿ ಈ ಸಂಚು ಬಯಲಾಗಿದ್ದು, 9 ಜನರ ಬಂಧನವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv62x7n6v0s6y7vhqaqbb6gq,imgname-belagavi-soldier-sandeep-murder-case-accused--1--1781542067878.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.15): ದೇ&lt;/strong&gt;ಶ ಕಾಯುವ ನಿವೃತ್ತ ಯೋಧನೊಬ್ಬನ ಸಾವಿನ ಪ್ರಕರಣ ಈಗ ಭಯಾನಕ ತಿರುವು ಪಡೆದುಕೊಂಡಿದೆ. ಕೇವಲ 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಸ್ವಂತ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿರುವ ರೋಚಕ ಕಥೆಯನ್ನು ಬೆಳಗಾವಿ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಸಂಬಂಧ ಪತ್ನಿ ಸೇರಿದಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ನಿವೃತ್ತ ಯೋಧ ಸಂದೀಪ ಮಂಜರಗಿ (46) ಈ ಪ್ರಕರಣದ ದುರ್ದೈವಿ. ಕೆಲವು ದಿನಗಳ ಹಿಂದೆ ಸಣ್ಣ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂದೀಪ್ ಅವರನ್ನು ಅವರ ಪತ್ನಿ ಸುಮಾ, ಘಟಪ್ರಭಾದ ಜೆಜೆ ಕೋ-ಆಪರೇಟಿವ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅದೇ ಆಸ್ಪತ್ರೆಯಲ್ಲಿ ಪತಿಯ ಪ್ರಾಣ ತೆಗೆಯಲು ಸುಮಾ ಮತ್ತು ಆಕೆಯ ಪ್ರಿಯಕರ ಪುಂಡಲೀಕ ಕಿರಾತಕ ಸಂಚು ರೂಪಿಸಿದ್ದರು.&lt;/p&gt;&lt;h2&gt;&lt;strong&gt;ಆಸ್ಪತ್ರೆಯಲ್ಲೇ ಸೈಲೆಂಟ್ ಕೊಲೆ:&lt;/strong&gt;&lt;/h2&gt;&lt;p&gt;ಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಆತನಿಗೆ ನಿದ್ದೆ ಮಾತ್ರೆಗಳನ್ನು ನೀಡಲಾಗಿತ್ತು. ಅಷ್ಟಕ್ಕೇ ಸುಮ್ಮನಾಗದ ಆರೋಪಿಗಳು, ಆಸ್ಪತ್ರೆಯ ಸಲೈನ್ ಬಾಟಲಿಯ ಮೂಲಕವೇ ವಿಷಪ್ರಾಶನ ಮಾಡಿಸಿ ಪತಿಯನ್ನು ಹತ್ಯೆ ಮಾಡಿದ್ದಾರೆ. ಈ ಕೃತ್ಯಕ್ಕೆ ಸುಮಾ ಮತ್ತು ಪುಂಡಲೀಕನಿಗೆ ಅಪ್ಪಾಸಾಬ್ ನಾಯಿಕವಾಡಿ, ಚನ್ನಪ್ಪಾ ಅಡವಿಸ್ವಾಮಿಮಠ ಸೇರಿದಂತೆ ಒಟ್ಟು 9 ಜನ ಸಾಥ್ ನೀಡಿದ್ದರು.&lt;/p&gt;&lt;h2&gt;&lt;strong&gt;ಪೊಲೀಸರಿಗೂ ಲಂಚ, ವರದಿ ತಿದ್ದುಪಡಿ:&lt;/strong&gt;&lt;/h2&gt;&lt;p&gt;ಕೊಲೆಯ ನಂತರ ಎಫ್&zwnj;ಎಸ್&zwnj;ಎಲ್ (FSL) ವರದಿಯಲ್ಲಿ ವಿಷಪ್ರಾಶನದ ಬಗ್ಗೆ ಉಲ್ಲೇಖವಾಗಿತ್ತು. ಆದರೆ, 2 ಕೋಟಿ ರೂಪಾಯಿ ವಿಮೆ ಹಣ ಸಿಗಬೇಕೆಂಬ ಉದ್ದೇಶದಿಂದ ಆರೋಪಿಗಳು ಹಣದ ಆಮಿಷವೊಡ್ಡಿ ಎಫ್&zwnj;ಎಸ್&zwnj;ಎಲ್ ವರದಿಯನ್ನೇ ತಿದ್ದುಪಡಿ ಮಾಡಿಸಲು ಪ್ರಯತ್ನಿಸಿದ್ದರು. ಇದಕ್ಕೆ ಕೆಲವು ಪೊಲೀಸ್ ಸಿಬ್ಬಂದಿಯೂ ಸಹಕರಿಸಿದ್ದರು ಎಂಬ ಸ್ಫೋಟಕ ಮಾಹಿತಿ ಸುದ್ದಿಗೋಷ್ಠಿಯಲ್ಲಿ ಹೊರಬಂದಿದೆ.&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ಬಾಂಬ್ ಸಿಡಿಸಿದ ಇನ್ಶೂರೆನ್ಸ್ ಜಗಳ:&lt;/strong&gt;&lt;/h2&gt;&lt;p&gt;ಇಷ್ಟೆಲ್ಲಾ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದು ವಿಮೆ ಹಣದ ಹಂಚಿಕೆಯ ವಿಚಾರದಲ್ಲಿ! ಸಂದೀಪ್ ಅವರ ಹೆಸರಿನಲ್ಲಿದ್ದ 2 ಕೋಟಿ ರೂ. ವಿಮೆ ಹಣವನ್ನು ಹಂಚಿಕೊಳ್ಳುವ ವಿಚಾರದಲ್ಲಿ ಪತ್ನಿ ಸುಮಾ ಮತ್ತು ಪ್ರಿಯಕರ ಪುಂಡಲೀಕ ನಡುವೆ ಜಗಳ ಆರಂಭವಾಗಿತ್ತು. ಈ ಸುಳಿವು ಬೆನ್ನಟ್ಟಿದ ಯಮಕನಮರಡಿ ಮತ್ತು ಘಟಪ್ರಭಾ ಪೊಲೀಸರು ತನಿಖೆ ನಡೆಸಿದಾಗ ಈ ಭೀಕರ ಹತ್ಯಾಕಾಂಡ ಬಯಲಾಗಿದೆ. ಬೆಳಗಾವಿ ಎಸ್&zwnj;ಪಿ ಕೆ. ರಾಮರಾಜನ್ ಅವರು ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಹಂತ ಹಂತದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ ಮತ್ತು ದಕ್ಷತೆಯಿಂದ ಕೆಲಸ ಮಾಡಿದ ಪೊಲೀಸ್ ತಂಡವನ್ನು ಶ್ಲಾಘಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-retired-soldier-murder-case-insurance-money-wife-lover-arrested/articleshow-ba0z5qe"/>
        </item>
        <item>
            <title><![CDATA[ಅಬಕಾರಿ ಅಧಿಕಾರಿಯ ಅಕ್ರಮ ಸಾಮ್ರಾಜ್ಯಕ್ಕೆ ಇಡಿ ಶಾಕ್, ಜಾರಕಿಹೊಳಿ ಭಾವ ಮಂಜುನಾಥ್ ವಶಕ್ಕೆ, ಲೆಕ್ಕವಿಲ್ಲದ ಬೇನಾಮಿ ಬಾರ್ ಲೈಸೆನ್ಸ್!]]></title>
            <link>https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt</link>
            <guid isPermaLink="true">https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt</guid>
            <pubDate>Wed, 24 Jun 2026 14:44:49 +0530</pubDate>
            <description><![CDATA[ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮೇಲೆ ಅಕ್ರಮ ಆಸ್ತಿ ಮತ್ತು ಹವಾಲಾ ಆರೋಪದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ನಡೆದ ಶೋಧಕಾರ್ಯದಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್&zwnj;ಗಳು ಪತ್ತೆಯಾಗಿದ್ದು, ಅಧಿಕಾರಿ ಮಂಜುನಾಥ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣವು ರಾಜ್ಯ ಅಬಕಾರಿ ಇಲಾಖೆಯಲ್ಲಿ ದೊಡ್ಡ ಹಗರಣವನ್ನು ಬಯಲುಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvwebjrzd71hqnf1qes1avxc,imgname-karnataka-excise-scam-y-manjunath-1782292269854.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು / ಬೆಳಗಾವಿ: &lt;/strong&gt;ರಾಜ್ಯ ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಹಗರಣವೊಂದು ಬೆಳಕಿಗೆ ಬಂದಿದ್ದು, ಬೆಳಗಾವಿ ವಿಭಾಗದ ಅಬಕಾರಿ ಹೆಚ್ಚುವರಿ ಆಯುಕ್ತ (Additional Commissioner) ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿ ಪತಿ ಹಾಗೂ ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿರುವ ವೈ. ಮಂಜುನಾಥ್ ಅವರನ್ನು ಕೊನೆಗೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ವಿದೇಶಿ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ಲಿಂಕ್ ಹಾಗೂ ಅಕ್ರಮ ಆಸ್ತಿ ಸಂಪಾದನೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ಈ ಜಂಟಿ ಕಾರ್ಯಾಚರಣೆ ನಡೆದಿದೆ. ಕರ್ನಾಟಕ, ಗೋವಾ ಮತ್ತು ರಾಜಸ್ಥಾನ ಸೇರಿದಂತೆ ದೇಶದ ವಿವಿಧ ಭಾಗಗಳ ಇಡಿ ಅಧಿಕಾರಿಗಳನ್ನೊಳಗೊಂಡ ಜಂಟಿ ಪಡೆಗಳು, 10ಕ್ಕೂ ಹೆಚ್ಚು ಅರೆಸೇನಾ ಪಡೆ (CRPF) ಸಿಬ್ಬಂದಿಗಳ ಬಿಗಿ ಭದ್ರತೆಯಲ್ಲಿ ಈ ದಾಳಿ ನಡೆಸಿವೆ.&lt;/p&gt;&lt;h2&gt;ರಾಜ್ಯದ 6 ಪ್ರಮುಖ ಕೇಂದ್ರಗಳಲ್ಲಿ ಏಕಕಾಲಕ್ಕೆ ಇಡಿ ರೇಡ್!&lt;/h2&gt;&lt;p&gt;ಬೆಳ್ಳಂಬೆಳಗ್ಗೆ 5:30ರ ಸುಮಾರಿಗೆ ಇಡಿ ಅಧಿಕಾರಿಗಳು ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿ ವೈ. ಮಂಜುನಾಥ್ ಹಾಗೂ ಅವರ ಆಪ್ತ ಜಾಲವನ್ನು ಗುರಿಯಾಗಿಸಿಕೊಂಡು ಬೆಂಗಳೂರು, ಬೆಳಗಾವಿ, ಮೈಸೂರು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಮತ್ತು ಅಥಣಿ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ.&lt;/p&gt;&lt;p&gt;&lt;strong&gt;ಬೆಂಗಳೂರು:&lt;/strong&gt; ರೇಸ್&zwnj;ಕೋರ್ಸ್ ರಸ್ತೆಯ (ಸ್ಯಾಂಕಿ ರಸ್ತೆ) ಪ್ರತಿಷ್ಠಿತ 'ದಿ ಸಮ್ಮಿಟ್' ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಮಂಜುನಾಥ್ ಅವರ ಐಷಾರಾಮಿ ಫ್ಲಾಟ್ ಮೇಲೆ ಮಹಿಳಾ ಇಡಿ ಅಧಿಕಾರಿಗಳ ನೇತೃತ್ವದ ತಂಡ ದಾಳಿ ನಡೆಸಿ, ಅಲ್ಲಿಯೇ ಇದ್ದ ಮಂಜುನಾಥ್ ಅವರನ್ನು ಸುದೀರ್ಘ ವಿಚಾರಣೆಯ ಬಳಿಕ ವಶಕ್ಕೆ ಪಡೆದಿದೆ.&lt;/p&gt;&lt;p&gt;&lt;strong&gt;ಬೆಳಗಾವಿ: &lt;/strong&gt;ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ಮಂಜುನಾಥ್ ಅವರ ಮುಖ್ಯ ನಿವಾಸದ ಮೇಲೆ ದಾಳಿ ನಡೆದಿದೆ. ಮಹತ್ವದ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಡಿವೈಎಸ್&zwnj;ಪಿ (DySP) ದರ್ಜೆಯ ಹಿರಿಯ ಅಧಿಕಾರಿಯೊಬ್ಬರು ಸ್ಥಳಕ್ಕೆ ದೌಡಾಯಿಸಿದ್ದಾರೆ.&lt;/p&gt;&lt;p&gt;&lt;strong&gt;ವಿಜಯನಗರ (ಅರಸೀಕೆರೆ):&lt;/strong&gt; ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಮಂಜುನಾಥ್ ಅವರಿಗೆ ಸೇರಿದ ಎರಡು ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.&lt;/p&gt;&lt;p&gt;&lt;strong&gt;ಮೈಸೂರು:&lt;/strong&gt; ದಟ್ಟಗಳ್ಳಿ 3ನೇ ಹಂತದ 5ನೇ ಕ್ರಾಸ್&zwnj;ನಲ್ಲಿರುವ #3638 'ಸ್ವಯಂಭು' ನಿವಾಸದ ಮೇಲೆ ದಾಳಿ ನಡೆದಿದೆ. ಇದು ಕೂಡ ಮಂಜುನಾಥ್ ಅವರ ಆಸ್ತಿಯಾಗಿದ್ದು, ಇಲ್ಲಿ ಅವರ ಆತ್ಮೀಯ ಸ್ನೇಹಿತೆ ಹಾಗೂ ಪ್ರಸ್ತುತ ಅಬಕಾರಿ ಇಲಾಖೆ ಇನ್ಸ್&zwnj;ಪೆಕ್ಟರ್ ಆಗಿರುವ ಯಮುನಾ ಮತ್ತು ಅವರ ತಾಯಿ ಸುಲೋಚನಾ ವಾಸವಾಗಿದ್ದರು. ಇಡಿ ಅಧಿಕಾರಿಗಳು ತೀವ್ರ ದಾಖಲೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗಾಗಿ ಯಮುನಾ ಅವರನ್ನು ಮುಖ ಮುಚ್ಚಿಕೊಂಡು ವಾಹನದಲ್ಲಿ ಕರೆದೊಯ್ದಿದ್ದಾರೆ.&lt;/p&gt;&lt;h2&gt;ಮಂಜುನಾಥ್ ಆಪ್ತ ಅಧಿಕಾರಿಗಳಿಗೂ ಇಡಿ ಶಾಕ್!&lt;/h2&gt;&lt;p&gt;ವೈ. ಮಂಜುನಾಥ್ ಅವರ ಅಕ್ರಮ ಜಾಲದಲ್ಲಿ ಶಾಮೀಲಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರ ಆಪ್ತ ವಲಯದ ಇತರ ಅಧಿಕಾರಿಗಳ ಮೇಲೂ ಇಡಿ ಅಧಿಕಾರಿಗಳು ಮುಗಿಬಿದ್ದಿದ್ದಾರೆ:&lt;/p&gt;&lt;p&gt;ಸತೀಶ್ ಶಿವಶಂಕರ ಕಾಗಲೆ (ಎಸ್ಪಿ, ತುಮಕೂರು ಅಬಕಾರಿ ಇಲಾಖೆ): ಮಂಜುನಾಥ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಇವರ ಬೆಳಗಾವಿಯ ಶ್ರೀನಗರದಲ್ಲಿರುವ ಅಪಾರ್ಟ್&zwnj;ಮೆಂಟ್ ಹಾಗೂ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಐದಾರು ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿದೆ.&lt;/p&gt;&lt;p&gt;ವಿಶ್ವನಾಥ್ ಗಾಣಿಗೇರ (ಡಿವೈಎಸ್ಪಿ, ಚಿಕ್ಕೋಡಿ ಅಬಕಾರಿ ಇಲಾಖೆ): ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿರುವ ಇವರ ನಿವಾಸದ ಮೇಲೂ ದಾಳಿ ನಡೆದಿದ್ದು, ಇವರೂ ಸಹ ಅಕ್ರಮ ವ್ಯವಹಾರಕ್ಕೆ ಸಾಥ್ ನೀಡಿದ ಆರೋಪ ಎದುರಿಸುತ್ತಿದ್ದಾರೆ.&lt;/p&gt;&lt;h2&gt;ದಾಳಿ ವೇಳೆ ಪತ್ತೆಯಾದವು ನೂರಾರು 'ಬೇನಾಮಿ ಬಾರ್ ಲೈಸೆನ್ಸ್'ಗಳು!&lt;/h2&gt;&lt;p&gt;ಇಡಿ ನಡೆಸಿದ ಸುದೀರ್ಘ ಪರಿಶೀಲನೆಯ ವೇಳೆ ಮಂಜುನಾಥ್ ಅವರ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ನಿವಾಸಗಳಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್&zwnj;ಗಳು ಹಾಗೂ ಅವುಗಳ ಅಗ್ರಿಮೆಂಟ್&zwnj; ಬಾಂಡ್&zwnj;ಗಳು ಪತ್ತೆಯಾಗಿವೆ.&lt;/p&gt;&lt;p&gt;ಅಕ್ರಮದ ನೆಟ್&zwnj;ವರ್ಕ್: ಮಂಜುನಾಥ್ ಅವರು ಬೆಳಗಾವಿ, ದಾವಣಗೆರೆ, ಬಳ್ಳಾರಿ, ಮೈಸೂರು ಮತ್ತು ಬೆಂಗಳೂರಿನಲ್ಲಿ ಬೇನಾಮಿ ಹೆಸರಿನಲ್ಲಿ ದೊಡ್ಡ ಪ್ರಮಾಣದ ಬಾರ್ ಮತ್ತು ರೆಸ್ಟೋರೆಂಟ್&zwnj;ಗಳನ್ನು ಸ್ಥಾಪಿಸಿದ್ದರು. ಈ ಬೇನಾಮಿ ಬಾರ್&zwnj;ಗಳಿಂದ ಬರುತ್ತಿದ್ದ ಕೋಟ್ಯಂತರ ರೂಪಾಯಿ ಕಪ್ಪು ಹಣವನ್ನು ಇವರು ವಿದೇಶಗಳಿಗೆ ಅಕ್ರಮವಾಗಿ ವರ್ಗಾವಣೆ (ಹವಾಲಾ ದಂಧೆ) ಮಾಡಿ, ಅಲ್ಲಿ ಹೂಡಿಕೆ ಮಾಡುತ್ತಿದ್ದರು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;2013ರ ಲೋಕಾಯುಕ್ತ ಕೇಸ್; ಪ್ರಭಾವ ಬಳಸಿ ಹುದ್ದೆ ಸೃಷ್ಟಿ!&lt;/h2&gt;&lt;p&gt;ವೈ. ಮಂಜುನಾಥ್ ಅವರ ಅಕ್ರಮಗಳ ಇತಿಹಾಸ ಇಂದಿನದ್ದಲ್ಲ. ಈ ಹಿಂದೆ 2013ರಲ್ಲಿ ಮೈಸೂರು ಅಬಕಾರಿ ಡಿಸಿ (DC) ಆಗಿದ್ದಾಗ ಇವರ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಬಾರ್ ಲೈಸೆನ್ಸ್ ನವೀಕರಣದಲ್ಲಿ (Renewal) ಕೋಟ್ಯಂತರ ರೂಪಾಯಿ ಲಂಚ ಹಾಗೂ ಸಂಬಳಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ (Disproportionate Assets) ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಲಾಖಾ ತನಿಖೆ (DE) ನಡೆದು ಪ್ರಸ್ತುತ ಅದು ಮುಚ್ಚಲ್ಪಟ್ಟಿತ್ತಾದರೂ, ಲೋಕಾಯುಕ್ತದ ಅದೇ ಅಕ್ರಮ ಆಸ್ತಿ ಗಳಿಕೆಯ ಮೂಲ ಕೇಸ್ ಅನ್ನು ಆಧರಿಸಿ ಈಗ ಇಡಿ ಅಖಾಡಕ್ಕಿಳಿದಿದೆ.&lt;/p&gt;&lt;h2&gt;ರಾಜಕೀಯ ಪ್ರಭಾವದ ಆರೋಪ:&amp;nbsp;&lt;/h2&gt;&lt;p&gt;ಈ ಹಿಂದೆ ಅಬಕಾರಿ ಇಲಾಖೆಯಲ್ಲಿ ಕೇವಲ ಬೆಂಗಳೂರು ರೇಂಜ್ ಮಾತ್ರ ಇತ್ತು. ಆದರೆ ಮಂಜುನಾಥ್ ಅವರು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿ ವಿಶೇಷವಾಗಿ 'ಬೆಳಗಾವಿ ಅಬಕಾರಿ ರೇಂಜ್' ಅನ್ನು ಸೃಷ್ಟಿಸಿಕೊಂಡಿದ್ದರು. ಇದರ ಮೂಲಕ ರಾಜ್ಯದ ಅರ್ಧದಷ್ಟು ಜಿಲ್ಲೆಗಳ ಅಬಕಾರಿ ನಿಯಂತ್ರಣದ ಸರ್ವಾಧಿಕಾರವನ್ನು ತಮ್ಮ ಕೈಯಲ್ಲೇ ಇಟ್ಟುಕೊಂಡು, ಕರಾವಳಿ ಮತ್ತು ಗಡಿ ಭಾಗದಲ್ಲಿ ವ್ಯಾಪಕ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಸದ್ಯ ಇಡಿ ಅಧಿಕಾರಿಗಳ ವಶದಲ್ಲಿರುವ ವೈ. ಮಂಜುನಾಥ್ ಹಾಗೂ ವಶಪಡಿಸಿಕೊಳ್ಳಲಾದ ಲೈಸೆನ್ಸ್ ದಾಖಲೆಗಳಿಂದ ಇಲಾಖೆಯ ಇನ್ನೂ ಹಲವು ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ನಡುಕ ಶುರುವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/state/mega-ed-raid-minister-satish-jarkiholi-relative-and-excise-additional-commissioner-manjunath-arrested-in-hawala-case-gdp/articleshow-cc6u5zt"/>
        </item>
        <item>
            <title><![CDATA[ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ ಅಂತ್ಯ, ₹13.3 ಕೋಟಿ ಆಸ್ತಿ ಜಪ್ತಿ! ಲಂಚದ 'ಡೈರಿ' ಪತ್ತೆ]]></title>
            <link>https://kannada.asianetnews.com/karnataka-districts/belagavi-ed-raid-excise-officer-manjunath-satish-jarkiholi-relative-seized-13-crore-assets/articleshow-dkvnpit</link>
            <guid isPermaLink="true">https://kannada.asianetnews.com/karnataka-districts/belagavi-ed-raid-excise-officer-manjunath-satish-jarkiholi-relative-seized-13-crore-assets/articleshow-dkvnpit</guid>
            <pubDate>Thu, 25 Jun 2026 19:18:52 +0530</pubDate>
            <description><![CDATA[&lt;p&gt;ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮೇಲೆ ನಡೆದ ಇಡಿ ದಾಳಿ ಅಂತ್ಯಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 13.3 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಸೇರಿದಂತೆ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಲಂಚದ ವಿವರಗಳಿದ್ದ ಡೈರಿಯೊಂದು ತನಿಖೆಯ ದಿಕ್ಕನ್ನೇ ಬದಲಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvzgfwr3d3z3nekn2aaxr9g7,imgname-belagavi-ed-raid-excise-officer-manjunath-1782395171586.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.25): ರಾ&lt;/strong&gt;ಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಹಾಗೂ ಬೆಳಗಾವಿ ವಲಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮೇಲಿನ ಇಡಿ (ED) ದಾಳಿ ಅಂತ್ಯಗೊಂಡಿದೆ. ಕಾರ್ಯಾಚರಣೆಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ದಾಳಿಯ ವೇಳೆ ಪತ್ತೆಯಾದ ಆಸ್ತಿ ಮತ್ತು ನಗದಿನ ವಿವರಗಳನ್ನು ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.&lt;/p&gt;&lt;h2&gt;&lt;strong&gt;13.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ:&lt;/strong&gt;&lt;/h2&gt;&lt;p&gt;ಬೆಳಗಾವಿ, ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಒಟ್ಟು 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಬರೋಬ್ಬರಿ 13.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ವಿವರ ಹೀಗಿದೆ:&lt;/p&gt;&lt;p&gt;&lt;strong&gt;ನಗದು: &lt;/strong&gt;5.5 ಕೋಟಿ ರೂಪಾಯಿ.&lt;/p&gt;&lt;p&gt;&lt;strong&gt;ಚಿನ್ನಾಭರಣ:&lt;/strong&gt; 7.8 ಕೋಟಿ ರೂಪಾಯಿ ಮೌಲ್ಯದ ಒಡವೆಗಳು.&lt;/p&gt;&lt;p&gt;&lt;strong&gt;ವಿದೇಶಿ ಕರೆನ್ಸಿ: &lt;/strong&gt;3.3 ಲಕ್ಷ ರೂಪಾಯಿ ಮೌಲ್ಯದ ಕರೆನ್ಸಿ.&lt;/p&gt;&lt;p&gt;ಇವುಗಳ ಜೊತೆಗೆ ಹೂಡಿಕೆಯ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಕ್ಯಾಶ್ ಬುಕ್&zwnj;ಗಳನ್ನು ವಶಕ್ಕೆ ಪಡೆಯಲಾಗಿದೆ.&lt;/p&gt;&lt;h2&gt;&lt;strong&gt;ಬಹಿರಂಗವಾಯ್ತು ಭ್ರಷ್ಟಾಚಾರದ 'ಡೈರಿ' ರಹಸ್ಯ:&lt;/strong&gt;&lt;/h2&gt;&lt;p&gt;ಈ ದಾಳಿಯಲ್ಲಿ ಅತ್ಯಂತ ಪ್ರಮುಖವಾಗಿ ಸಿಕ್ಕಿರುವುದು ಒಂದು 'ಡೈರಿ'. ಈ ಡೈರಿಯಲ್ಲಿ ವಿವಿಧ ಮದ್ಯದಂಗಡಿಗಳಿಂದ ಪ್ರತಿ ತಿಂಗಳು ಎಷ್ಟು ಲಂಚ ಪಡೆಯಲಾಗುತ್ತಿತ್ತು ಎಂಬ ಬಗ್ಗೆ ಸವಿಸ್ತಾರವಾಗಿ ಉಲ್ಲೇಖಿಸಲಾಗಿದೆ. ಅಬಕಾರಿ ಲೈಸೆನ್ಸ್ ಮಂಜೂರು ಮಾಡುವ ಮತ್ತು ನವೀಕರಿಸುವ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಲಂಚದ ಹಗರಣ ನಡೆದಿದೆ ಎಂದು ಇಡಿ ತಿಳಿಸಿದೆ. ಲಂಚದ ಹಣವನ್ನು ವೈಯಕ್ತಿಕ ಬಳಕೆ, ಐಷಾರಾಮಿ ಆಸ್ತಿ ಖರೀದಿ ಮತ್ತು ಬೆನಾಮಿ ಹೆಸರಿನಲ್ಲಿ ವ್ಯವಹಾರ ಹೂಡಿಕೆಗೆ ಬಳಸಿರುವುದು ಪತ್ತೆಯಾಗಿದೆ.&lt;/p&gt;&lt;h2&gt;&lt;strong&gt;ಲೋಕಾಯುಕ್ತ ಎಫ್&zwnj;ಐಆರ್ ಆಧರಿಸಿ ದಾಳಿ:&lt;/strong&gt;&lt;/h2&gt;&lt;p&gt;ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಜಗದೀಶ್ ನಾಯಕ್, ಕೆ.ಎಂ. ತಮ್ಮಣ್ಣ ಮತ್ತು ವೈ. ಮಂಜುನಾಥ್ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್&zwnj;ಐಆರ್ (FIR) ಆಧಾರದ ಮೇಲೆ ಇಡಿ ಅಧಿಕಾರಿಗಳು 2002ರ ಪಿಎಂಎಲ್&zwnj;ಎ (PMLA) ಸೆಕ್ಷನ್ 17ರ ಅಡಿಯಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಇಲಾಖೆಯಲ್ಲಿ ವ್ಯವಸ್ಥಿತವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಧಿಕಾರಿಗಳು ಕುಟುಂಬದ ಸದಸ್ಯರು ಮತ್ತು ಸಹಚರರ ಹೆಸರಿನಲ್ಲಿ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.&lt;/p&gt;&lt;p&gt;ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿಕರ ಮೇಲೆಯೇ ಈ ದಾಳಿ ನಡೆದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಸದ್ಯಕ್ಕೆ ತನಿಖೆ ಮುಂದುವರಿದಿದ್ದು, ಈ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಇನ್ನು ಯಾರ್ಯಾರ ಕೈವಾಡವಿದೆ ಎಂಬುದು ಹೊರಬರಬೇಕಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-ed-raid-excise-officer-manjunath-satish-jarkiholi-relative-seized-13-crore-assets/articleshow-dkvnpit"/>
        </item>
        <item>
            <title><![CDATA[2028ರಲ್ಲಿ ಕರ್ನಾಟಕದಲ್ಲಿ BJP ಅಧಿಕಾರಕ್ಕೆ ಬರಲಿದೆ: ಶಾಸಕ ರಮೇಶ ಜಾರಕಿಹೊಳಿ ಭವಿಷ್ಯ]]></title>
            <link>https://kannada.asianetnews.com/karnataka-districts/ramesh-jarkiholi-predicts-bjp-victory-in-karnataka-assembly-election-2028-gvd/articleshow-fffgbyl</link>
            <guid isPermaLink="true">https://kannada.asianetnews.com/karnataka-districts/ramesh-jarkiholi-predicts-bjp-victory-in-karnataka-assembly-election-2028-gvd/articleshow-fffgbyl</guid>
            <pubDate>Thu, 18 Jun 2026 22:28:39 +0530</pubDate>
            <description><![CDATA[&lt;p&gt;Karnataka Politics: ಗೋಕಾಕ್&zwnj;ನಲ್ಲಿ ನಡೆದ ಎಸ್&zwnj;ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ, 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01katbj3pt54bkc7erj8m8twtw,imgname-ramesh-jarkiholi--3--1763968618202.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗೋಕಾಕ (ಜೂ.18): &lt;/strong&gt;ಎಸ್&zwnj;ಐಆರ್&zwnj;ನ್ನು ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ವಿರೋಧಿಸಿದವು. ನಮ್ಮ ಬಿಜೆಪಿ ಪಕ್ಷದ ವರಿಷ್ಠರು ಗಂಭೀರವಾಗಿ ತೆಗೆದುಕೊಂಡಿದ್ದರ ಪರಿಣಾಮವಾಗಿ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿತು. ಅದರಂತೆ ಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ರಮೇಶ ಜಾರಕಿಹೊಳಿ ಭವಿಷ್ಯ ನುಡಿದರು.&lt;/p&gt;&lt;p&gt;ನಗರದ ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್&zwnj;ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು. ಬಿಎಲ್&zwnj;ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದರು.&lt;/p&gt;&lt;h2&gt;&lt;strong&gt;ಗೊಂದಲ ಉಂಟಾಗುವ ಸಾಧ್ಯತೆ&lt;/strong&gt;&lt;/h2&gt;&lt;p&gt;ಪ್ರತಿ ಬೂತ್&zwnj;ಮಟ್ಟದಲ್ಲಿ ನೇಮಕ ಗೊಂಡಿರುವ ಬಿಎಲ್&zwnj;ಎ-2 ಕಾರ್ಯಕರ್ತರು ಒಂದೇ ಹೆಸರಿನ ಅನೇಕ ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸದಿದ್ದರೇ ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಗಳಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಹೆಸರು ಮತದಾರರ ಪಟ್ಟಿಯಲ್ಲಿ ಸಮರ್ಪಕವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು.&lt;/p&gt;&lt;p&gt;ವಿಭಾಗ ಪ್ರಭಾರಿ ಸಂಜಯ ಪಾಟೀಲ, ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಬಿಎಲ್&zwnj;ಒ-1 ಮಾಣಿಕ ಹಿರಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಒಡೆಯರ್, ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಆನಂದ್ ಅತ್ತುಗೋಳ, ಬಿಜೆಪಿ ಮುಖಂಡ ಪ್ರಮೋದ ಜೋಶಿ, ಡಾ.ಕೆ.ವಿ.ಪಾಟೀಲ, ಸುರೇಶ ಪಾಟೀಲ, ಸುರೇಶ ಪತ್ತಾರ ಸೇರಿದಂತೆ ಹಲವಾರು ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.&lt;/p&gt;&lt;p&gt;ಪ್ರಜಾಪ್ರಭುತ್ವದಲ್ಲಿ ಮತದಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಅಮೂಲ್ಯ ಹಕ್ಕಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು.-ರಮೇಶ ಜಾರಕಿಹೊಳಿ, ಶಾಸಕರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ramesh-jarkiholi-predicts-bjp-victory-in-karnataka-assembly-election-2028-gvd/articleshow-fffgbyl"/>
        </item>
        <item>
            <title><![CDATA[ಅಥಣಿಯ ಜಲಮೂಲ ರಹಸ್ಯ:  ನದಿ ಬತ್ತುತ್ತಿದ್ದರೂ ಕುಡಿಯುವ ನೀರಿಗಿಲ್ಲ ಬರ, ಶಾಶ್ವತ ಪರಿಹಾರ]]></title>
            <link>https://kannada.asianetnews.com/karnataka-districts/belagavi-groundwater-levels-in-athani-area-have-increased-by-filling-9-lakes-with-water-from-the-krishna-river-mrq/articleshow-hfxas3t</link>
            <guid isPermaLink="true">https://kannada.asianetnews.com/karnataka-districts/belagavi-groundwater-levels-in-athani-area-have-increased-by-filling-9-lakes-with-water-from-the-krishna-river-mrq/articleshow-hfxas3t</guid>
            <pubDate>Wed, 17 Jun 2026 09:21:41 +0530</pubDate>
            <description><![CDATA[ಅಥಣಿ ತಾಲೂಕಿನಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ₹140 ಕೋಟಿ ವೆಚ್ಚದ ಕೆರೆ ತುಂಬುವ ಯೋಜನೆ ಯಶಸ್ವಿಯಾಗಿದೆ. ಕೃಷ್ಣಾ ನದಿಯಿಂದ 9 ಕೆರೆಗಳಿಗೆ ನೀರು ತುಂಬಿಸುವ ಮೂಲಕ, ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ರೈತರ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv9ty21rg549kj8kbya2ve66,imgname-athani-1781667924024.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಅಣ್ಣಾಸಾಬ ತೆಲಸಂಗ&lt;/strong&gt;&lt;/p&gt;&lt;p&gt;&lt;strong&gt;ಬೆಳಗಾವಿ: &lt;/strong&gt;ಶತಮಾನಗಳಿಂದ ತಾಲೂಕಿನ ಪೂರ್ವ ಭಾಗದ ರೈತರ ಕೃಷಿಗೆ ಜಲ ಮೂಲವಾಗಿದ್ದ ಕೆರೆಗಳು ಬತ್ತಿ ಹೋಗಿ ಬರಪೀಡಿತವಾಗುತ್ತಿದ್ದ ಅಥಣಿ ತಾಲೂಕಿಗೆ ಕೆರೆ ತುಂಬುವ ಯೋಜನೆ ಈ ಭಾಗದ ಜನತೆಗೆ ವರದಾನ ಪರಿಣಮಿಸಿದೆ. 18 ಕಿಮೀ ಅಂತರದಲ್ಲಿರುವ ಕೃಷ್ಣಾ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ರೈತರ ಕೃಷಿಗೆ ಮತ್ತು ಈ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ನೀಡಿದೆ.&lt;/p&gt;&lt;p&gt;ಪ್ರತಿ ವರ್ಷ ಬೀಸಿಗೆ ವೇಳೆ ಎದುರಾಗುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿದ್ದ ಕೆರೆ ತುಂಬುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮತಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ತಾಲೂಕಿನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು ಮಾದರಿಯಾಗಿದೆ.&lt;/p&gt;&lt;h2&gt;&lt;strong&gt;9 ಕೆರೆ ತುಂಬಿಸುವ ಯೋಜನೆ&lt;/strong&gt;&lt;/h2&gt;&lt;p&gt;ಅಥಣಿ ತಾಲೂಕಿನ ಪೂರ್ವ ಭಾಗದ ನೀರಾವರಿ ಸೌಲಭ್ಯದಿಂದ ವಂಚಿತವಾದ ಹಳ್ಳಿಗಳಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಲಕ್ಷ್ಮಣ ಸವದಿ ಸರ್ಕಾರದಿಂದ ₹140 ಕೋಟಿ ಮಂಜೂರಾತಿ ಪಡೆದುಕೊಳ್ಳುವ ಮೂಲಕ ಯಲ್ಲಮ್ಮವಾಡಿ, ಕೋಹಳ್ಳಿ, ಅಡಹಳ್ಳಿ, ಐಗಳಿ ಮತ್ತು ಬಾಡಗಿ ಗ್ರಾಮಗಳಲ್ಲಿನ ಒಟ್ಟು 9 ಕೆರೆಗಳಿಗೆ ನೀರು ತುಂಬಿಸಲಾಗಿದೆ. ಇದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗುವ ಮೂಲಕ ತೆರೆದ ಬಾವಿ ಮತ್ತು ಕೊಳವೆ ಬಾವಿಗಳಿಗೆ ಸತತ ನೀರು ಬರುವುದರಿಂದ ನೀರಾವರಿಗೆ ಅನುಕೂಲವಾಗಲಿದೆ. ಇದಲ್ಲದೆ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯಡಿ ಕೊಟ್ಟಲಗಿ, ಕಕಮರಿ, ಅರಟಾಳ, ತೆಲಸಂಗ ಮತ್ತು ಐಗಳಿ ಗ್ರಾಮಗಳ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವುದು ಈ ಯೋಜನೆ ಉದ್ದೇಶವಾಗಿದೆ.&lt;/p&gt;&lt;h3&gt;&lt;strong&gt;ಅಂತರ್ಜಲ ವೃದ್ಧಿ&lt;/strong&gt;&lt;/h3&gt;&lt;p&gt;ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳು ಐದು ಜಲಾಶಯಗಳಿದ್ದು, ಆದರೂ ಕೃಷಿ ಚಟುವಟಿಕೆಗಳಿಗೆ, ಕೈಗಾರಿಕೆ ಮತ್ತು ಇತರೆ ಬಳಕೆಗಾಗಿ ನೀರು ಸಾಲುತ್ತಿಲ್ಲ. ಬೇಸಿಗೆಯ ಬಂದರೆ ಕೆರೆ, ನಾಲಾ, ನದಿ ಮತ್ತು ಜಲಾಶಯಗಳಲ್ಲಿಯೂ ನೀರಿನ ಮಟ್ಟ ಕುಸಿಯುತ್ತದೆ. ಜಿಲ್ಲಾ ಅಂತರ್ಜಲ ಕಚೇರಿಯ ಭೂ ವಿಜ್ಞಾನಿಗಳ ಮಾಹಿತಿ ಪ್ರಕಾರ ಜಿಲ್ಲೆಯ 15 ತಾಲೂಕುಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಅಂತರ್ಜಲ ಮಟ್ಟ ಕುಸಿತ ಕಂಡು ಬಂದಿದೆ. ಆದರೆ, ಅಥಣಿ ತಾಲೂಕಿನಲ್ಲಿ 2.29 ಮೀಟರ್ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. 2025ರ ಮೇ ತಿಂಗಳು ವರದಿಯು 28.83 ಮೀಟರ್ ಇದ್ದರೇ, 2026 ರ ಮೇ ತಿಂಗಳು ವರದಿ 26.54 ಮೀಟರ್ ಎನ್ನಲಾಗಿದೆ.&lt;/p&gt;&lt;h3&gt;&lt;strong&gt;ಕುಡಿಯುವ ನೀರಿಗೆ ಪರಿಹಾರ&lt;/strong&gt;&lt;/h3&gt;&lt;p&gt;ಪ್ರತಿವರ್ಷ ಬೀಸಿಗೆಯಲ್ಲಿ ಮಾರ್ಚ್ ಕಳೆದು ಏಪ್ರಿಲ್ ತಿಂಗಳ ಆರಂಭವಾಗುವ ಮೊದಲೇ ಕುಡಿಯುವ ನೀರಿಗಾಗಿ ಹಾಹಾಕಾರ, ಖಾಲಿ ಕೊಡಗಳ ಪ್ರದರ್ಶನ ಹಾಗೂ ಪ್ರತಿಭಟನೆ ನಡೆಯುತ್ತಿದ್ದ ದೃಶ್ಯಗಳು ಈ ಬಾರಿ ಕಂಡು ಬರಲಿಲ್ಲ. ಕೆಲವು ಗ್ರಾಮಗಳಲ್ಲಿ ತೋಟದ ವಸತಿಗಳನ್ನು ಹೊರತುಪಡಿಸಿದರೇ ಬಹುತೇಕ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಅಷ್ಟೊಂದು ಗಂಭೀರವಾಗಿರಲಿಲ್ಲ. ಏಕೆಂದರೆ ಕಳೆದ ಬಾರಿ ಉತ್ತಮ ಮಳೆ ಸುರಿದ ಪರಿಣಾಮ ಕೆರೆಕಟ್ಟೆಗಳು, ಬಾವಿ ಕೊಳವೆ ಬಾವಿಗಳಲ್ಲಿ ನೀರು ಚೆನ್ನಾಗಿ ಸಂಗ್ರಹವಾಗಿತ್ತು. ಅಲ್ಲದೇ ಕೆರೆಯಲ್ಲಿ ನೀರು ಬತ್ತುವ ಮೊದಲೇ ಕೆರೆ ತುಂಬುವ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಅಂತರ್ಜಲ ಹೆಚ್ಚಳವಾಗಿದೆ.&lt;/p&gt;&lt;h3&gt;&lt;strong&gt;ಜೆಜೆಎಂ ಯೋಜನೆಗೂ ಸಹಕಾರಿ&lt;/strong&gt;&lt;/h3&gt;&lt;p&gt;ಕೇಂದ್ರದ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೂ ನೀರು ಒದಗಿಸುವ ಯೋಜನೆಗೂ ಈ ಕೆರೆ ತುಂಬುವ ಯೋಜನೆ ಬಹಳಷ್ಟು ಸಹಕಾರಿಯಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾಹಿತಿ ಪ್ರಕಾರ ತಾಲೂಕಿನ 88 ಗ್ರಾಮಗಳಲ್ಲಿ ಶೇ.80 ರಷ್ಟು ಜೆಜೆಎಂ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗಿದೆ. 72,332 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಯೋಜನೆಯಲ್ಲಿ ಈಗಾಗಲೇ 58,230 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ.&lt;/p&gt;&lt;h3&gt;&lt;strong&gt;ಬೋರವೆಲ್&zwnj; ಕೊರೆತ ಇಳಿಮುಖ&lt;/strong&gt;&lt;/h3&gt;&lt;p&gt;ಪ್ರತಿ ವರ್ಷ ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗಳಿಗೆ ಎದುರಾಗುವ ನೀರಿನ ಸಮಸ್ಯೆಗೆ ಅಲ್ಲಲ್ಲಿ ಬೋರವೆಲ್&zwnj; ಕೊರೆಸುವ ಪ್ರಮಾಣ ಹೆಚ್ಚಾಗಿತ್ತು. ಆದರೆ, ಈ ಬಾರಿ ಅಷ್ಟೊಂದು ನೀರಿನ ಸಮಸ್ಯೆ ಎದುರಾಗದ ಹಿನ್ನೆಲೆಯಲ್ಲಿ ಬೋರವೆಲ್&zwnj; ಹಾಕಿಸುವವರ ಸಂಖ್ಯೆಯೂ ಕೂಡ ಇಳಿಮುಖವಾಗಿದೆ.&lt;/p&gt;&lt;p&gt;&lt;strong&gt;ರವೀಂದ್ರ ಮುರಗಾಲಿ, ಸಹಾಯಕ ಅಭಿಯಂತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅಥಣಿ.&lt;/strong&gt;&lt;/p&gt;&lt;p&gt;ಅಥಣಿ ತಾಲೂಕಿನ 88 ಗ್ರಾಮಗಳಲ್ಲಿ ಶೇ. 80 ರಷ್ಟು ಜೆಜೆಎಂ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. 72,332 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸುವ ಯೋಜನೆಯಲ್ಲಿ ಈಗಾಗಲೇ 58,230 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಕೃಷ್ಣ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಕೆರೆ ತುಂಬುವ ಯೋಜನೆ, ಕರಿ ಮಸೂತಿ ಏತ ನೀರಾವರಿ, ಬಹುಗ್ರಾಮ ಸಂಯುಕ್ತ ಕುಡಿಯುವ ನೀರಿನ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಇದು ನೆರವಾಗಿದೆ.&lt;/p&gt;&lt;p&gt;&lt;strong&gt;ಪ್ರವೀಣ್ ಪಾಟೀಲ, ಕಾರ್ಯನಿರ್ವಾಹಕ ಅಭಿಯಂತರ, ಚಿಕ್ಕ ನೀರಾವರಿ ಇಲಾಖೆ ಅಥಣಿ.&lt;/strong&gt;&lt;/p&gt;&lt;p&gt;ಚಿಕ್ಕ ನೀರಾವರಿ ಯೋಜನೆಯ ಮೂಲಕ ತಾಲೂಕಿನ ಪೂರ್ವ ಭಾಗದ 7 ಗ್ರಾಮಗಳ 9 ಕೆರೆಗಳಿಗೆ ಪೈಪ್ ಲೈನ್ ಮೂಲಕ ಕೃಷ್ಣಾ ನದಿ ನೀರನ್ನು ತುಂಬಿಸಲಾಗಿದೆ. ಇದರಿಂದ ಪ್ರಸಕ್ತ ವರ್ಷದಲ್ಲಿ ತೋಟಗಾರಿಕೆ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ನೆರವಾಯಿತು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-groundwater-levels-in-athani-area-have-increased-by-filling-9-lakes-with-water-from-the-krishna-river-mrq/articleshow-hfxas3t"/>
        </item>
        <item>
            <title><![CDATA[ಸಚಿವ ಸತೀಶ್ ಜಾರಕಿಹೊಳಿ ಸೋದರಿ ಪತಿ, ಮಾಜಿ ಸಂಸದರ ಪುತ್ರ ವೈ ಮಂಜುನಾಥ್‌ಗೆ ಇಡಿ ಶಾಕ್]]></title>
            <link>https://kannada.asianetnews.com/gallery/karnataka-districts/belagavi-enforcement-directorate-raided-residence-of-minister-satish-jarkiholi-relative-t-y-manjunath-mrq-ku0xyb9</link>
            <guid isPermaLink="true">https://kannada.asianetnews.com/gallery/karnataka-districts/belagavi-enforcement-directorate-raided-residence-of-minister-satish-jarkiholi-relative-t-y-manjunath-mrq-ku0xyb9</guid>
            <pubDate>Wed, 24 Jun 2026 08:58:27 +0530</pubDate>
            <description><![CDATA[&lt;p&gt;ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvvtbr85dsasmgbg96115ghr,imgname-belagavi-ed-raid--2--1782271303941.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ&zwnj; ಸಂಬಂಧಿ (ಸೋದರಿಯ ಪತಿ) ವೈ. ಮಂಜುನಾಥ್ ನಿವಾಸದ ಮೇಲೆ ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ವೈ. ಮಂಜುನಾಥ್ ಹೆಚ್ಚುವರಿ ಆಯುಕ್ತರಾಗಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಇಂದು ಬೆಳಗ್ಗೆ ಬೆಳಗಾವಿಯ ದೂರದರ್ಶನ ಕೇಂದ್ರದಲ್ಲಿರುವ ಮಂಜುನಾಥ್ ನಿವಾಸಕ್ಕೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. 10 ಕ್ಕೂ ಅಧಿಕ ಅರೆಸೇನಾ ಪಡೆ ಭದ್ರತೆಯಲ್ಲಿ ಈ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ಅವರಿಗೆ ಸಂಬಂಧಿಸಿದಂತೆ ಬೆಳಗಾವಿ, ಮೈಸೂರು, ಬೆಂಗಳೂರು, ಅರಿಸಿಕೇರೆ ಸೇರಿ ಆರು ಕಡೆ ದಾಳಿ ನಡೆದಿದೆ. ಮೈಸೂರಿನಲ್ಲಿರುವ ವೈ ಮಂಜುನಾಥ ಸ್ನೇಹಿತೆ ಮನೆ, ಬೆಂಗಳೂರಲ್ಲಿರುವ ಅಪಾರ್ಟ್&zwnj;ಮೆಂಟ್, ಹಾಸನ ಜಿಲ್ಲೆಯ ಅರಿಸೀಕರೆಯಲ್ಲಿ ಆಪ್ತನ ಮನೆ ಮೇಲೆಯೂ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ.&lt;/p&gt;&lt;img&gt;&lt;p&gt;ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ವೈ ಮಂಜುನಾಥ ಸ್ನೇಹಿತನ ಮನೆ ಮೇಲೆ ದಾಳಿ ನಡೆದಿದೆ. ವೈ. ಮಂಜುನಾಥ್ ಅವರು ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಪುತ್ರರಾಗಿದ್ದು, ಬೇನಾಮಿ ಹೆಸರಲ್ಲಿ ಜಮೀನು, ಬಾರ್, ರೆಸ್ಟೋರೆಂಟ್ ಸೇರಿದಂತೆ ಅಕ್ರಮ ಆಸ್ತಿ ಸಂಪಾದನೆಯ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ಅಪಾರ್ಟ್ಮೆಂಟ್&zwnj;ನಲ್ಲಿ ವೈ. ಮಂಜುನಾಥ್ ಇದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/belagavi-enforcement-directorate-raided-residence-of-minister-satish-jarkiholi-relative-t-y-manjunath-mrq-ku0xyb9"/>
        </item>
        <item>
            <title><![CDATA[Taluk Office Power Cut: ಕರೆಂಟ್ ಬಿಲ್ ಕಟ್ಟದ ತಹಸೀಲ್ದಾರ್ ಕಚೇರಿ; ವಿದ್ಯುತ್ ಕನೆಕ್ಷನ್ ಕಟ್ ಮಾಡಿದ ಹೆಸ್ಕಾಂ!]]></title>
            <link>https://kannada.asianetnews.com/karnataka-districts/belagavi-tehshildar-office-plunged-into-darkness-power-cut-over-58936-unpaid-bill/articleshow-l2gc3tm</link>
            <guid isPermaLink="true">https://kannada.asianetnews.com/karnataka-districts/belagavi-tehshildar-office-plunged-into-darkness-power-cut-over-58936-unpaid-bill/articleshow-l2gc3tm</guid>
            <pubDate>Tue, 16 Jun 2026 14:49:32 +0530</pubDate>
            <description><![CDATA[&lt;p&gt;ಬೆಳಗಾವಿ ತಹಶಿಲ್ದಾರ್ ಕಚೇರಿಯು ಸುಮಾರು 59,000 ರೂಪಾಯಿಗಳ ವಿದ್ಯುತ್ ಬಿಲ್ ಪಾವತಿಸದ ಕಾರಣ, ವಿದ್ಯುತ್ ಸರಬರಾಜು ಕಂಪನಿಯು ಸಂಪರ್ಕವನ್ನು ಕಡಿತಗೊಳಿಸಿದೆ. ಇದರಿಂದಾಗಿ ಕಚೇರಿಯು ಕತ್ತಲಲ್ಲಿ ಮುಳುಗಿದ್ದು, &amp;nbsp;ಸಾರ್ವಜನಿಕರು, ವಿಶೇಷವಾಗಿ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv7vmbnhq1xsgytp4qyq1mfn,imgname-belagavi-power-cut-1781601545905.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.16): ಸ&lt;/strong&gt;ರ್ಕಾರದ ನಿಯಮಗಳನ್ನು ಜನರಿಗೆ ತಿಳಿಸುವ ಹಾಗೂ ಜನರಿಗೆ ಸರ್ಕಾರಿ ಆದೇಶಗಳನ್ನು ಪಾಲಿಸುವಂತೆ ಸೂಚಿಸುವ ತಹಶಿಲ್ದಾರ್ ಕಚೇರಿಯೇ ಈಗ ನಿಯಮ ಉಲ್ಲಂಘಿಸಿ ಕತ್ತಲಲ್ಲಿ ಕೂರುವಂತಾಗಿದೆ. ಕಳೆದ ಮೂರು ತಿಂಗಳ ವಿದ್ಯುತ್ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಬೆಳಗಾವಿ ತಹಶಿಲ್ದಾರ್ ಕಚೇರಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?:&lt;/strong&gt;&lt;/h2&gt;&lt;p&gt;ಬೆಳಗಾವಿ ತಹಶಿಲ್ದಾರ್ ಕಚೇರಿಯು ಕಳೆದ ಮೂರು ತಿಂಗಳಿನಿಂದ ಸುಮಾರು 58,936 ರೂಪಾಯಿಗಳ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿತ್ತು. ಹಲವಾರು ಬಾರಿ ಸೂಚನೆ ನೀಡಿದರೂ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಯ ಅಧಿಕಾರಿಗಳು ಇಂದು ಬೆಳಿಗ್ಗೆ 10 ಗಂಟೆಗೆ ಕಚೇರಿಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಪರಿಣಾಮವಾಗಿ ಇಡೀ ಕಚೇರಿ ಕತ್ತಲಲ್ಲಿ ಮುಳುಗಿದೆ.&lt;/p&gt;&lt;h2&gt;&lt;strong&gt;ವೃದ್ಧರ ಹಾಗೂ ಸಾರ್ವಜನಿಕರ ಆಕ್ರೋಶ:&lt;/strong&gt;&lt;/h2&gt;&lt;p&gt;ಬೆಳಿಗ್ಗೆಯಿಂದಲೇ ವಿದ್ಯುತ್ ಇಲ್ಲದ ಕಾರಣ ಕಚೇರಿಯ ಕಂಪ್ಯೂಟರ್&zwnj;ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ವಿವಿಧ ಕೆಲಸಗಳಿಗಾಗಿ ಬಂದಿದ್ದ ಸಾರ್ವಜನಿಕರು ಪರದಾಡುವಂತಾಗಿದೆ. ಅದರಲ್ಲೂ ವಿಶೇಷವಾಗಿ ವೃದ್ಧಾಪ್ಯ ವೇತನ ಮತ್ತು ಇತರ ಪಿಂಚಣಿ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಲು ದೂರದ ಹಳ್ಳಿಗಳಿಂದ ಬಂದಿದ್ದ ಹಿರಿಯ ನಾಗರಿಕರು ವಿದ್ಯುತ್ ಇಲ್ಲದೇ ಕೆಲಸವಾಗದ ಕಾರಣ ಕಚೇರಿಯ ಹೊರಗೆ ಕಾದು ಕುಳಿತು ಸುಸ್ತಾಗಿದ್ದಾರೆ.&lt;/p&gt;&lt;p&gt;'ಪಿಂಚಣಿಗಾಗಿ ಅರ್ಜಿ ಹಾಕಲು ಬೆಳಿಗ್ಗೆಯಿಂದ ಕಾಯುತ್ತಿದ್ದೇವೆ. ಆದರೆ ಕರೆಂಟ್ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ನಮಗೆ ಶಿಕ್ಷೆಯಾಗುತ್ತಿದೆ,' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಅಧಿಕಾರಿಗಳ ಬೇಜವಾಬ್ದಾರಿ:&lt;/strong&gt;&lt;/h2&gt;&lt;p&gt;ಸರ್ಕಾರಿ ಕಚೇರಿಯೊಂದರಲ್ಲಿ ಇಷ್ಟು ದೊಡ್ಡ ಮೊತ್ತದ ಬಿಲ್ ಬಾಕಿ ಉಳಿಸಿಕೊಳ್ಳುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಕೂಡಲೇ ಬಾಕಿ ಹಣ ಪಾವತಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಷ್ಟೆಲ್ಲಾ ಗೊಂದಲಗಳಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-tehshildar-office-plunged-into-darkness-power-cut-over-58936-unpaid-bill/articleshow-l2gc3tm"/>
        </item>
        <item>
            <title><![CDATA[ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್: ಪ್ರಯಾಣಕ್ಕೆ ಲಕ್ಷುರಿ ಕೋಚ್‌ ರೆಡಿ, ಒಳಾಂಗಣ ವಿನ್ಯಾಸದ ವಿಡಿಯೋ ವೈರಲ್]]></title>
            <link>https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs</link>
            <guid isPermaLink="true">https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs</guid>
            <pubDate>Thu, 18 Jun 2026 12:23:36 +0530</pubDate>
            <description><![CDATA[&lt;p&gt;ಭಾರತೀಯ ರೈಲ್ವೆಯು ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ 'ವಂದೇ ಭಾರತ್ ಸ್ಲೀಪರ್' ರೈಲನ್ನು ಆರಂಭಿಸಲಿದೆ. ಈ ಪ್ರೀಮಿಯಂ ರೈಲು, ಪ್ರಸ್ತುತ ರೈಲುಗಳಿಗಿಂತ ವೇಗವಾಗಿರಲಿದ್ದು, ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಆಧುನಿಕ ಸೌಕರ್ಯಗಳಾದ ಖಾಸಗಿ ಕ್ಯಾಬಿನ್&zwnj;ಗಳು ಇದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvcq8pmmdze2dnzk112k8558,imgname-vande-bharat-bengaluru-mumbai--5--1781764741780.jpg" type="image/jpeg" height="390" width="690"/>
            <content:encoded><![CDATA[&lt;p&gt;ಭಾರತೀಯ ರೈಲ್ವೆಯು ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ 'ವಂದೇ ಭಾರತ್ ಸ್ಲೀಪರ್' ರೈಲನ್ನು ಆರಂಭಿಸಲಿದೆ. ಈ ಪ್ರೀಮಿಯಂ ರೈಲು, ಪ್ರಸ್ತುತ ರೈಲುಗಳಿಗಿಂತ ವೇಗವಾಗಿರಲಿದ್ದು, ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಆಧುನಿಕ ಸೌಕರ್ಯಗಳಾದ ಖಾಸಗಿ ಕ್ಯಾಬಿನ್&zwnj;ಗಳು ಇದೆ.&lt;/p&gt;&lt;img&gt;&lt;p&gt;ಭಾರತೀಯ ರೈಲ್ವೆಯ ಮಹತ್ವಾಕಾಂಕ್ಷಿ 'ವಂದೇ ಭಾರತ್' ಕ್ರಾಂತಿ ಈಗ ಹೊಸ ಹಂತಕ್ಕೆ ಕಾಲಿಡುತ್ತಿದೆ. ದೇಶದ ಎರಡು ಪ್ರಮುಖ ಆರ್ಥಿಕ ರಾಜಧಾನಿಗಳಾದ ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ ಮುಂಬರುವ 'ವಂದೇ ಭಾರತ್ ಸ್ಲೀಪರ್' ರೈಲು ಸಂಚಾರ ಆರಂಭಿಸಲಿದೆ. ಸಾಂಪ್ರದಾಯಿಕ ರಾತ್ರಿ ಪ್ರಯಾಣದ ರೈಲುಗಳಿಗೆ ಹೋಲಿಸಿದರೆ, ಇದು ಅತ್ಯಂತ ವೇಗದ ಮತ್ತು ಹೆಚ್ಚು ಆರಾಮದಾಯಕ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಿದೆ. ಮುಂದಿನ ಪೀಳಿಗೆಯ ಸುದೀರ್ಘ ಪ್ರಯಾಣದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಈ ಪ್ರೀಮಿಯಂ ರೈಲು ಸೇವೆಗೆ ಹಸಿರು ನಿಶಾನೆ ನೀಡಿದೆ.ರಾತ್ರಿ ಪ್ರಯಾಣಕ್ಕೆ ಹೊಸ ಮೆರುಗು&lt;/p&gt;&lt;img&gt;&lt;p&gt;ಪ್ರಸ್ತುತ ಚಾಲ್ತಿಯಲ್ಲಿರುವ ವಂದೇ ಭಾರತ್ ಚೇರ್ ಕಾರ್ (ಕುಳಿತುಕೊಳ್ಳುವ ವ್ಯವಸ್ಥೆ) ರೈಲುಗಳಿಗಿಂತ ಈ ಸ್ಲೀಪರ್ ಆವೃತ್ತಿಯು ಸಂಪೂರ್ಣ ಭಿನ್ನವಾಗಿದೆ. ಇದನ್ನು ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಜನರಿಗಾಗಿ ವಿನ್ಯಾಸಗೊಳಿಸಲಾಗಿದ್ದು, ವೇಗ ಮತ್ತು ಪ್ರಯಾಣಿಕರ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ.&lt;/p&gt;&lt;p&gt;&lt;strong&gt;ಆಧುನಿಕ ಫಸ್ಟ್ ಎಸಿ ಕೋಚ್: &lt;/strong&gt;ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ರೈಲಿನ ಮೊದಲ ಎಸಿ ಕೋಚ್&zwnj;ನ ದೃಶ್ಯಗಳು ಎಲ್ಲರ ಗಮನ ಸೆಳೆಯುತ್ತಿವೆ.&lt;/p&gt;&lt;p&gt;&lt;strong&gt;ಸುರಕ್ಷಿತ ಮೆಟ್ಟಿಲುಗಳ ವಿನ್ಯಾಸ: &lt;/strong&gt;ಹಳೆಯ ರೈಲುಗಳಲ್ಲಿ ಮೇಲಿನ ಬರ್ತ್&zwnj;ಗಳನ್ನು ಹತ್ತಲು ಕಡಿದಾದ ಕಷ್ಟಕರ ಏಣಿಗಳಿರುತ್ತಿದ್ದವು. ಆದರೆ, ವಂದೇ ಭಾರತ್ ಸ್ಲೀಪರ್&zwnj;ನಲ್ಲಿ ಮೇಲಿನ ಬರ್ತ್&zwnj;ಗಳನ್ನು ಸುಲಭವಾಗಿ ಹತ್ತಲು ಪ್ರತ್ಯೇಕ ಮತ್ತು ಸುರಕ್ಷಿತ ಮೆಟ್ಟಿಲುಗಳನ್ನು ಒದಗಿಸಲಾಗಿದೆ. ಈ ರೈಲಿನ ಫಸ್ಟ್ ಎಸಿ ಕೋಚ್ ಸಂಪೂರ್ಣ ಖಾಸಗಿ ಕ್ಯಾಬಿನ್&zwnj;ಗಳು (Private Cabins), ಮೇಲಿನ ಬರ್ತ್&zwnj;ಗಳಿಗೆ ಸುಲಭವಾಗಿ ಹತ್ತಲು ಆಧುನಿಕ ಮೆಟ್ಟಿಲುಗಳು, ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಅತ್ಯಾಧುನಿಕ ಪ್ರೀಮಿಯಂ ಒಳಾಂಗಣ ವಿನ್ಯಾಸವನ್ನು ಒಳಗೊಂಡಿರಲಿದೆ.&lt;/p&gt;&lt;p&gt;&lt;strong&gt;ಪ್ರೀಮಿಯಂ ಒಳಾಂಗಣ&lt;/strong&gt;: ಈ ಬೋಗಿಗಳಲ್ಲಿ ಸ್ಲೈಡಿಂಗ್ ಕಂಪಾರ್ಟ್&zwnj;ಮೆಂಟ್ ಬಾಗಿಲುಗಳು, ಅತ್ಯಾಧುನಿಕ ಬೆಳಕಿನ ವ್ಯವಸ್ಥೆ (Modern Lighting) ಮತ್ತು ಕಣ್ಣಿಗೆ ತಂಪು ನೀಡುವ ಸುಂದರ ಒಳಾಂಗಣ ವಿನ್ಯಾಸವಿದೆ.&lt;/p&gt;&lt;p&gt;&lt;strong&gt;ಸೌಕರ್ಯಗಳು:&lt;/strong&gt; ಆರಾಮದಾಯಕವಾದ ಮಲಗುವ ಸೀಟುಗಳು, ನವೀಕರಿಸಿದ ಫಿಟ್ಟಿಂಗ್&zwnj;ಗಳು ಮತ್ತು ಪ್ರಯಾಣಿಕ ಸ್ನೇಹಿ ವಿನ್ಯಾಸಗಳು ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಅತ್ಯುತ್ತಮ ಪ್ರಯಾಣದ ಅನುಭವ ನೀಡಲಿವೆ.&lt;/p&gt;&lt;img&gt;&lt;p&gt;ಪ್ರಸ್ತುತ ಈ ಮಾರ್ಗದಲ್ಲಿ ಚಲಿಸುವ ಸಾಮಾನ್ಯ ರೈಲುಗಳು ಮುಂಬೈನಿಂದ ಬೆಂಗಳೂರನ್ನು ತಲುಪಲು ಸುಮಾರು 20 ಗಂಟೆಗಳಿಗಿಂತಲೂ ಅಧಿಕ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಹೊಸ ವಂದೇ ಭಾರತ್ ಸ್ಲೀಪರ್ ರೈಲು ಈ ಪ್ರಯಾಣದ ಸಮಯವನ್ನು ಕೇವಲ 14 ರಿಂದ 16 ಗಂಟೆಗಳಿಗೆ ಕಡಿತಗೊಳಿಸುವ ಸಾಧ್ಯತೆಯಿದೆ. ಅಂದರೆ ಪ್ರಯಾಣಿಕರಿಗೆ ಸರಿಸುಮಾರು 4 ರಿಂದ 5 ಗಂಟೆಗಳ ಸಮಯ ಉಳಿತಾಯವಾಗಲಿದೆ. ರೈಲಿನ ಸರಾಸರಿ ವೇಗವನ್ನು ಕಾಯ್ದುಕೊಳ್ಳುವ ಸಲುವಾಗಿ, ಇದಕ್ಕೆ ಅತ್ಯಂತ ಸೀಮಿತ ನಿಲುಗಡೆಗಳನ್ನು (Stoppages) ಮಾತ್ರ ನೀಡಲಾಗುವುದು ಎನ್ನಲಾಗಿದೆ. ಆದರೆ, ಭಾರತೀಯ ರೈಲ್ವೆ ಇಲಾಖೆಯು ಅಂತಿಮ ವೇಳಾಪಟ್ಟಿಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.&lt;/p&gt;&lt;img&gt;&lt;p&gt;&lt;strong&gt;ಪ್ರಯಾಣಿಕರ ಸಾಮರ್ಥ್ಯ: &lt;/strong&gt;ಈ ಸ್ಲೀಪರ್ ರೈಲು ಒಟ್ಟು 16 ಸಂಪೂರ್ಣ ಹವಾನಿಯಂತ್ರಿತ (AC) ಬೋಗಿಗಳನ್ನು ಹೊಂದಿರಲಿದ್ದು, ಒಂದೇ ಬಾರಿಗೆ 823 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ.&lt;/p&gt;&lt;p&gt;&lt;strong&gt;ಸುಧಾರಿತ ತಂತ್ರಜ್ಞಾನ: &lt;/strong&gt;ರಾತ್ರಿ ವೇಳೆಯ ಪ್ರಯಾಣದಲ್ಲಿ ಯಾವುದೇ ಗದ್ದಲವಿಲ್ಲದೆ ಸುಗಮ ಸವಾರಿಯನ್ನು ಖಚಿತಪಡಿಸಿಕೊಳ್ಳಲು ಇದರಲ್ಲಿ ಸುಧಾರಿತ 'ಸಸ್ಪೆನ್ಷನ್ ತಂತ್ರಜ್ಞಾನ'ವನ್ನು ಬಳಸಲಾಗಿದೆ.&lt;/p&gt;&lt;p&gt;&lt;strong&gt;ಸ್ವಯಂಚಾಲಿತ ಬಾಗಿಲುಗಳು ಮತ್ತು ನೈರ್ಮಲ್ಯ: &lt;/strong&gt;ರೈಲಿನಲ್ಲಿ ಆಟೋಮ್ಯಾಟಿಕ್ ಬಾಗಿಲುಗಳು, ಬಯೋ-ವ್ಯಾಕ್ಯೂಮ್ ಶೌಚಾಲಯಗಳು ಮತ್ತು ಅತ್ಯಾಧುನಿಕ ಸುರಕ್ಷತಾ ಫೀಚರ್&zwnj;ಗಳು ಲಭ್ಯವಿರಲಿವೆ.&lt;/p&gt;&lt;p&gt;&lt;strong&gt;ರೈಲಿನ ಮಾರ್ಗ ಯಾವುದು?&lt;/strong&gt;&lt;/p&gt;&lt;p&gt;ವಿವಿಧ ಮಾರ್ಗಗಳ ಜೋಡಣೆಯ ಬಗ್ಗೆ ಸದ್ಯ ಚರ್ಚೆಗಳು ನಡೆಯುತ್ತಿವೆಯಾದರೂ, ರೈಲ್ವೆ ಮಂಡಳಿಯು ಅಧಿಕೃತ ಮಾರ್ಗಸೂಚಿಯನ್ನು ಇನ್ನು ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಪ್ರಾಥಮಿಕ ವರದಿಗಳ ಪ್ರಕಾರ ಈ ರೈಲು ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ಕೈಗಾರಿಕಾ ಹಾಗೂ ಸಾಂಸ್ಕೃತಿಕ ಕೇಂದ್ರಗಳನ್ನು ಸಂಪರ್ಕಿಸಲಿದೆ. ಲೋಕಾರ್ಪಣೆ ದಿನಾಂಕ ಹತ್ತಿರ ಬಂದಾಗ ನಿಖರವಾದ ನಿಲುಗಡೆಗಳ ಮಾಹಿತಿ ಸಿಗಲಿದೆ. ಈ ರೈಲು ಕರ್ನಾಟಕದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ನಗರಗಳ ಪ್ರಮುಖ ಮಾರ್ಗದ ಮೂಲಕ ಮುಂಬೈ ತಲುಪುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದರೂ, ರೈಲ್ವೆ ಇಲಾಖೆಯು ಇದರ ಉದ್ಘಾಟನಾ ದಿನಾಂಕ, ದರ ಪಟ್ಟಿ ಅಥವಾ ಟಿಕೆಟ್ ಕಾಯ್ದಿರಿಸುವಿಕೆಯ ವೇಳಾಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಆದ್ದರಿಂದ, ಪ್ರಸ್ತುತ ಐಆರ್&zwnj;ಸಿಟಿಸಿ (IRCTC) ಆಪ್ ಅಥವಾ ಕೌಂಟರ್&zwnj;ಗಳಲ್ಲಿ ಬುಕಿಂಗ್ ಲಭ್ಯವಿರುವುದಿಲ್ಲ. ರೇಕ್ (Rake) ಹಂಚಿಕೆ ಮತ್ತು ಪ್ರಾಯೋಗಿಕ ಸಂಚಾರ ಪೂರ್ಣಗೊಂಡ ನಂತರ ಅಧಿಕೃತ ಪ್ರಕಟಣೆ ಹೊರಬೀಳಲಿದೆ.&lt;/p&gt;&lt;img&gt;&lt;p&gt;ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು, ಭಾರತದ ಪ್ರಮುಖ ನಗರಗಳ ನಡುವೆ ವಿಶ್ವದರ್ಜೆಯ ಪ್ರೀಮಿಯಂ ರಾತ್ರಿ ಸಂಪರ್ಕವನ್ನು ಕಲ್ಪಿಸುವ ಭಾರತೀಯ ರೈಲ್ವೆಯ ಬೃಹತ್ ದೃಷ್ಟಿಕೋನದ ಒಂದು ಭಾಗವಾಗಿದೆ. ಈಗಾಗಲೇ ಚೇರ್ ಕಾರ್ ಮೂಲಕ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿರುವ ವಂದೇ ಭಾರತ್, ಇದೀಗ ಸ್ಲೀಪರ್ ಕೋಚ್&zwnj;ಗಳ ಮೂಲಕ ರಾತ್ರಿ ಪ್ರಯಾಣದ ವ್ಯಾಖ್ಯಾನವನ್ನೇ ಬದಲಾಯಿಸಲು ಸಜ್ಜಾಗಿದೆ. ಈ ಮಾರ್ಗವು ದೇಶದಲ್ಲೇ ಸ್ಲೀಪರ್ ರೈಲು ಪಡೆಯಲಿರುವ ಎರಡನೇ ಅತ್ಯಂತ ನಿರೀಕ್ಷಿತ ಮಾರ್ಗವಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs"/>
        </item>
        <item>
            <title><![CDATA[Monsoon: ಬರಿದಾಗುತ್ತಿದೆ ಕೃಷ್ಣೆಯ ಒಡಲು: ಮಹಾರಾಷ್ಟ್ರದಿಂದ ಬಿಡುಗಡೆ ಆಗಿಲ್ಲ ಯಾಕೆ ನೀರು?]]></title>
            <link>https://kannada.asianetnews.com/karnataka-districts/severe-water-shortage-in-maharashtra-makes-it-difficult-to-release-water-into-krishna-river-mrq/articleshow-ntu6edg</link>
            <guid isPermaLink="true">https://kannada.asianetnews.com/karnataka-districts/severe-water-shortage-in-maharashtra-makes-it-difficult-to-release-water-into-krishna-river-mrq/articleshow-ntu6edg</guid>
            <pubDate>Wed, 24 Jun 2026 07:35:01 +0530</pubDate>
            <description><![CDATA[ಮಹಾರಾಷ್ಟ್ರದಲ್ಲಿ ತೀವ್ರ ನೀರಿನ ಅಭಾವದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಕಷ್ಟಕರವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಆದರೆ, ಬೆಳಗಾವಿ ನಗರಕ್ಕೆ ಜುಲೈ ಅಂತ್ಯದವರೆಗೆ ಹಿಡಕಲ್ ಜಲಾಶಯದಲ್ಲಿ ಸಾಕಷ್ಟು ನೀರಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvvnvx9pc2vxccx6e9fe0mcg,imgname-satish-jarkiholi-1782266590518.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಮಹಾರಾಷ್ಟ್ರದಲ್ಲಿ ತೀವ್ರ ನೀರಿನ ಅಭಾವ ಎದುರಾಗಿದೆ. ಹಾಗಾಗಿ, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ಮಹಾರಾಷ್ಟ್ರ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಾತ್ರವಲ್ಲದೇ ಹಿಂದಿನ ವರ್ಷಗಳಲ್ಲಿಯೂ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ ನೀರು ಬಿಡುಗಡೆಗೊಂಡಿಲ್ಲ. ಕೊಯ್ನಾ ಜಲಾಶಯ ಭರ್ತಿಯಾಗಿದ್ದ ಸಂದರ್ಭಗಳಲ್ಲಿಯೂ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರಲಿಲ್ಲ. ಪ್ರಸ್ತುತ ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ ಇರುವುದರಿಂದ ಅಲ್ಲಿನ ಅಧಿಕಾರಿಗಳು ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಕುಡಿಯುವ ನೀರಿನ ಸಮಸ್ಯೆ ಇಲ್ಲ&lt;/strong&gt;&lt;/h2&gt;&lt;p&gt;ಬೆಳಗಾವಿ ನಗರಕ್ಕೆ ಜುಲೈ ಅಂತ್ಯದವರೆಗೆ ಸಾಕಾಗುವಷ್ಟು ಕುಡಿಯುವ ನೀರಿನ ಸಂಗ್ರಹ ಘಟಪ್ರಭಾ (ಹಿಡಕಲ್) ಜಲಾಶಯದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಲಾಶಯಕ್ಕೆ ಇನ್ನೂ ನೀರಿನ ಒಳಹರಿವು ಆರಂಭವಾಗದ ಕಾರಣ ನೀರಿನ ಮಟ್ಟ ಕಡಿಮೆಯಾಗಿದೆಂಬ ಭಾವನೆ ಮೂಡಿದೆ. ಆದರೆ, ನಗರಕ್ಕೆ ಮುಂದಿನ ಎರಡು ತಿಂಗಳಿಗೆ ಬೇಕಾದಷ್ಟು ನೀರಿನ ಸಂಗ್ರಹವಿದ್ದು, ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;&lt;p&gt;ನಗರದ ಕೆಲ ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾದರೇ ಟ್ಯಾಂಕರ್&zwnj;ಗಳ ಮೂಲಕ ನೀರು ಪೂರೈಸಲು ಈಗಾಗಲೇ ಚಿಂತನೆ ನಡೆಸಲಾಗಿದೆ. ಅಗತ್ಯವಿದ್ದರೆ ಟ್ಯಾಂಕರ್&zwnj;ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗುವುದು. ನಗರದಲ್ಲಿ ಸಾಕಷ್ಟು ಕೊಳವೆಬಾವಿಗಳಿರುವುದರಿಂದ ಪರ್ಯಾಯ ನೀರಿನ ವ್ಯವಸ್ಥೆಯೂ ಲಭ್ಯವಿದೆ ಎಂದರು.&lt;/p&gt;&lt;p&gt;ನಗರದಲ್ಲಿ ಜಾರಿಯಲ್ಲಿರುವ 24&times;7 ನಿರಂತರ ಕುಡಿಯುವ ನೀರು ಯೋಜನೆ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಕೇವಲ ಒಂದು ಗಂಟೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ. ನಗರದಲ್ಲಿ ನೀರಿನ ಕೊರತೆ ಇಲ್ಲ. ಆದರೆ, ವಿತರಣಾ ವ್ಯವಸ್ಥೆ ಮತ್ತು ನಿರ್ವಹಣೆಯ ಸಮಸ್ಯೆಗಳಿವೆ ಎಂದು ತಿಳಿಸಿದರು.&lt;/p&gt;&lt;p&gt;ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳೀಯ ನೀರಿನ ಸಮಸ್ಯೆ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ಸಮರ್ಪಕ ಮಾಹಿತಿ ತರುತ್ತಿಲ್ಲ. ಸಮಸ್ಯೆಗಳ ಕುರಿತು ಸ್ಪಷ್ಟ ಮಾಹಿತಿ ನೀಡಿದರೇ ಮಾತ್ರ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಎಂದರು.&lt;/p&gt;&lt;h3&gt;&lt;strong&gt;ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ&lt;/strong&gt;&lt;/h3&gt;&lt;p&gt;ಹಿಡಕಲ್ ಜಲಾಶಯದ ಕೈಗಾರಿಕಾ ಬಳಕೆಗೆ ಮೀಸಲಾದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪೂರೈಸಲಾಗುತ್ತಿದೆ. ಆದರೆ, ಯಾವುದೇ ಹೆಚ್ಚುವರಿ ನೀರನ್ನು ಅಲ್ಲಿಗೆ ತೆಗೆದುಕೊಂಡು ಹೋಗುತ್ತಿಲ್ಲ. ಕೈಗಾರಿಕೆಗಳಿಗೆ ನಿಗದಿತ ಮಿತಿಯಲ್ಲಿಯೇ ನೀರು ಒದಗಿಸಲಾಗುತ್ತಿದ್ದು, ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.&lt;/p&gt;&lt;p&gt;ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸುಮಾರು 20 ಸಚಿವ ಸ್ಥಾನಗಳು ಖಾಲಿ ಇದ್ದರೂ, ಆಕಾಂಕ್ಷಿಗಳ ಸಂಖ್ಯೆ 40ರಿಂದ 60ರಷ್ಟಿದೆ. ಜಾತಿ, ಪ್ರದೇಶ ಮತ್ತು ರಾಜಕೀಯ ಸಮೀಕರಣಗಳನ್ನು ಪರಿಗಣಿಸಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಖಚಿತವಾಗಿದ್ದು, ಹೆಚ್ಚುವರಿ ಸ್ಥಾನ ನೀಡಬೇಕೇ ಎಂಬುವುದು ಹೈಕಮಾಂಡ್ ನಿರ್ಧಾರಕ್ಕೆ ಸೇರಿದೆ. ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/severe-water-shortage-in-maharashtra-makes-it-difficult-to-release-water-into-krishna-river-mrq/articleshow-ntu6edg"/>
        </item>
        <item>
            <title><![CDATA[RBI: ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್‌ ಲೈಸೆನ್ಸ್‌ ರದ್ದು, ದಿವಾಳಿಗೆ ಕಾರಣವೇನು? ನಿಮ್ಮ ಹಣ ಮರಳಿ ಬರುತ್ತಾ?]]></title>
            <link>https://kannada.asianetnews.com/india-news/rbi-cancels-licence-of-karnataka-based-sri-mahalaxmi-urban-co-operative-credit-bank-rav/articleshow-oxig2gd</link>
            <guid isPermaLink="true">https://kannada.asianetnews.com/india-news/rbi-cancels-licence-of-karnataka-based-sri-mahalaxmi-urban-co-operative-credit-bank-rav/articleshow-oxig2gd</guid>
            <pubDate>Fri, 19 Jun 2026 06:21:40 +0530</pubDate>
            <description><![CDATA[&lt;p&gt;ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಆರ್&zwnj;ಬಿಐ, ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ವ್ಯವಹಾರವನ್ನು ನಿಷೇಧಿಸಲಾಗಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvends3vm4dnpfjkjqyn17cz,imgname----------------------6--1781829919867.jpg" type="image/jpeg" height="390" width="690"/>
            <content:encoded><![CDATA[&lt;h2&gt;ಠೇವಣಿದಾರರಿಗೆ ಹಣ ಮರಳಿಸಲು ಕ್ರಮ&lt;/h2&gt;&lt;p&gt;ಪಿಟಿಐ ಮುಂಬೈ (ಜೂ.19): ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಕರ್ನಾಟಕ ಬೆಳಗಾವಿ ಜಿಲ್ಲೆ ಗೋಕಾಕ ಮೂಲದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕಿನ(Sri Mahalakshmi Urban Co-operative Credit Bank) ಪರವಾನಗಿಯನ್ನು ರಿಸರ್ವ್ ಬ್ಯಾಂಕ್(RBI) ರದ್ದುಗೊಳಿಸಿದೆ. ಅದರಂತೆ ಗುರುವಾರದಿಂದಲೇ ಠೇವಣಿ ಸ್ವೀಕಾರ ಮತ್ತು ಠೇವಣಿ ಮರುಪಾವತಿ ಸೇರಿದಂತೆ ಎಲ್ಲ ಬ್ಯಾಂಕಿಂಗ್ ವ್ಯವಹಾರವನ್ನು ನಿಷೇಧಿಸಲಾಗಿದೆ.&lt;/p&gt;&lt;h3&gt;ಲಿಕ್ವಿಡೇಟರ್ ಅನ್ನು ನೇಮಿಸಲು ಆದೇಶ&lt;/h3&gt;&lt;p&gt;ಬ್ಯಾಂಕ್ ವ್ಯವಹಾರ ಅಂತ್ಯಗೊಳಿಸಲು ಮತ್ತು ಲಿಕ್ವಿಡೇಟರ್ ಅನ್ನು ನೇಮಿಸಲು ಆದೇಶ ಹೊರಡಿಸುವಂತೆ ಕರ್ನಾಟಕದ ಸಹಕಾರ ಸಂಘಗಳ ರಿಜಿಸ್ಟ್ರಾರ್&zwnj;ಗೆ ಕೋರಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್&zwnj;ಬಿಐ) ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.&lt;/p&gt;&lt;p&gt;ದಿವಾಳಿಯ ನಂತರ, ಸುಮಾರು ಶೇ.97.9ರಷ್ಟು ಠೇವಣಿದಾರರು ತಮ್ಮ ಠೇವಣಿಗಳ ಪೂರ್ಣ ಮೊತ್ತವನ್ನು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್&zwnj;ನಿಂದ ಪಡೆಯಲಿದ್ದಾರೆ ಎಂದು ಅದು ಹೇಳಿದೆ.&lt;/p&gt;&lt;p&gt;ಬ್ಯಾಂಕ್&zwnj; ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳನ್ನು ಹೊಂದಿಲ್ಲ ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949 ರ ಕೆಲವು ನಿಬಂಧನೆಗಳನ್ನು ಅದು ಪಾಲಿಸಲು ಸಾಧ್ಯವಿಲ್ಲ ಎಂದು ಲೈಸೆನ್ಸ್&zwnj; ರದ್ದತಿಗೆ ಆರ್&zwnj;ಬಿಐ ಕಾರಣ ನೀಡಿದೆ.&lt;/p&gt;&lt;p&gt;&lsquo;ಈಗಿನ ಆರ್ಥಿಕ ಸ್ಥಿತಿಯನ್ನು ನೋಡಿದರೆ ಬ್ಯಾಂಕ್ ತನ್ನ ಪ್ರಸ್ತುತ ಠೇವಣಿದಾರರಿಗೆ ಪೂರ್ಣವಾಗಿ ಪಾವತಿಸಲು ಸಾಧ್ಯವಾಗುವುದಿಲ್ಲ. ಬ್ಯಾಂಕಿನ ಮುಂದುವರಿಕೆಯು ಅದರ ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತದೆ&rsquo; ಎಂದೂ ಅದು ಹೇಳಿದೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/rbi-cancels-licence-of-karnataka-based-sri-mahalaxmi-urban-co-operative-credit-bank-rav/articleshow-oxig2gd"/>
        </item>
        <item>
            <title><![CDATA[ಬೆಳಗಾವಿ: ಕಸದ ರಾಶಿಯಲ್ಲಿ 59 ಗುಂಡುಗಳು ಪತ್ತೆ! ತನಿಖೆ ವೇಳೆ ಶಾಕಿಂಗ್ ಮಾಹಿತಿ ಬಯಲು!]]></title>
            <link>https://kannada.asianetnews.com/karnataka-districts/belagavi-59-bullets-found-in-pile-garbage-shocking-incident/articleshow-sgaqogi</link>
            <guid isPermaLink="true">https://kannada.asianetnews.com/karnataka-districts/belagavi-59-bullets-found-in-pile-garbage-shocking-incident/articleshow-sgaqogi</guid>
            <pubDate>Tue, 16 Jun 2026 15:08:46 +0530</pubDate>
            <description><![CDATA[ಬೆಳಗಾವಿಯ ಉದ್ಯಮಭಾಗದಲ್ಲಿ ಕಸ ವಿಂಗಡಣೆ ಮಾಡುವಾಗ ಪೌರಕಾರ್ಮಿಕರಿಗೆ 59 ಬಳಕೆಯಾದ ಗುಂಡುಗಳು ಪತ್ತೆಯಾಗಿವೆ. ಪೊಲೀಸರ ತನಿಖೆಯಿಂದ, ವಿಜಯಪುರದ ಮಾಜಿ ಸೈನಿಕನೊಬ್ಬ ಸಂಬಂಧಿಕರ ಮನೆಯಲ್ಲಿ ಬಿಟ್ಟುಹೋಗಿದ್ದ ಈ ಗುಂಡುಗಳನ್ನು, ಮನೆ ಖಾಲಿ ಮಾಡುವಾಗ ಕಸಕ್ಕೆ ಎಸೆಯಲಾಗಿತ್ತು ಎಂಬುದು ತಿಳಿದುಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv7we5wxeydy76c1mx5gdrby,imgname-----------------------2026-06-16t150211.796-1781602391965.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.16): &lt;/strong&gt;ಕಸ ಬಳಿಯುವಾಗ ಒಂದಲ್ಲ ಎರಡಲ್ಲ ಬರೋಬ್ಬರಿ 59 ಬಳಕೆಯಾದ ಗುಂಡುಗಳು ಕಂಡು ಪೌರಕಾರ್ಮಿಕರು ಬೆಚ್ಚಿಬಿದ್ದ ಘಟನೆ ಬೆಳಗಾವಿ(Belagavi) ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶ(udyamabhaga Sector Industrial Area)ದಲ್ಲಿ ನಡೆದಿದೆ.&lt;/p&gt;&lt;h2&gt;ಕಸದ ರಾಶಿಯಲ್ಲಿ ಬಳಕೆಯಾಗದ ಗುಂಡುಗಳು!&lt;/h2&gt;&lt;p&gt;ಎಂದಿನಂತೆ ಕಸ ವಿಂಗಡಣೆಯಲ್ಲಿ ತೊಡಗಿದ್ದ ಪೌರ ಕಾರ್ಮಿಕರು. ಈ ವೇಳೆ ಕಸದ ರಾಶಿಯಲ್ಲಿ 59 ಬಳಕೆಯಾದ ಗುಂಡುಗಳು ಕಣ್ಣಿಗೆ ಬಿದ್ದು ಶಾಕ್ ಆಗಿದ್ದಾರೆ. ಕೆಲಕಾಲ ಆತಂಕಗೊಂಡಿದ್ದರು. ಬಳಿಕ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.&lt;/p&gt;&lt;h3&gt;ಸ್ಥಳಕ್ಕೆ ದೌಡಾಯಿಸಿದ ಪೊಲೀಸರು&lt;/h3&gt;&lt;p&gt;ಮಾಹಿತಿ ತಿಳಿಯುತ್ತಿದ್ದಂತೆ ಉದ್ಯಮಭಾಗ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಸಿಕ್ಕ ಅಷ್ಟು ಗುಂಡುಗಳು ಕಂಡು ಪೊಲೀಸರು ಶಾಕ್ ಆದ್ರು. ಇಷ್ಟು ಗುಂಡುಗಳು ಎಲ್ಲಿಂದ ಬಂದವು ಎಂದು ಒಂದು ಕ್ಷಣ ಪೊಲೀಸರಿಗೂ ಟೆನ್ಷನ್ ಹೆಚ್ಚಿಸಿತು. ಪತ್ತೆಯಾದ ಗುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ವೇಳೆ ತಿಳಿದುಬಂದಿದ್ದೇನೆಂದರೆ..&lt;/p&gt;&lt;p&gt;ತನಿಖೆಯಲ್ಲಿ ಹೊರಬಿತ್ತು ಶಾಕಿಂಗ್ ಮಾಹಿತಿ&lt;/p&gt;&lt;p&gt;ಆರಂಭದಲ್ಲಿ ಇಷ್ಟೊಂದು ಗುಂಡುಗಳು ಹೇಗೆ ಕಸದ ರಾಶಿಗೆ ಬಂದವು ಎಂಬುದು ಪೊಲೀಸರಿಗೆ ಕುತೂಹಲ, ಆತಂಕ ಉಂಟು ಮಾಡಿತ್ತು. ಆದರೆ ತನಿಖೆ ವೇಳೆ ವಿಜಯಪುರ ಮೂಲದ ಮಾಜಿ ಸೈನಿಕನೊಬ್ಬ ತನ್ನ ಸಂಬಂಧಿಕರ ಮಕ್ಕಳಿಗೆ ತೋರಿಸಲು ಬಳಕೆಯಾದ ಗುಂಡುಗಳನ್ನು ಬೆಳಗಾವಿಯಲ್ಲಿರುವ ಸಂಬಂಧಿಕರ ಮನೆಗೆ ತಂದಿದ್ದ ಎಂಬ ಮಾಹಿತಿ ಬಹಿರಂಗವಾಯ್ತ.&lt;/p&gt;&lt;p&gt;&lt;strong&gt;ಮನೆ ಖಾಲಿ ಮಾಡುವಾಗ ತಿಪ್ಪೆಗೆ ಎಸೆದ ಸಂಬಂಧಿಕರು!&lt;/strong&gt;&lt;/p&gt;&lt;p&gt;ಸಂಬಂಧಿಕರ ಮನೆಗೆ ಹೋಗಿದ್ದ ವಿಜಯಪುರ ಮೂಲದ ಸೈನಿಕ. ಈ ವೇಳೆ ಮಕ್ಕಳಿಗೆ ತೋರಿಸಲು ಗುಂಡುಗಳನ್ನ ತಂದಿದ್ದ. ಆದರೆ ಹೊಣೆಗೇಡಿತನ ಅನ್ನಬೇಕೋ ದಡ್ಡತನ ಅನ್ನಬೇಕೋ ನೋಡಿ, ಅವರ ಮನೆಯಿಂದ ಹೊರಬರುವಾಗ ಅಷ್ಟು ಗುಂಡುಗಳನ್ನು ಅವರ ಮನೆಯಲ್ಲೇ ಸೈನಿಕ ಬಿಟ್ಟುಬಂದಿದ್ದಾನೆ. ಮನೆಯಲ್ಲೇ ಉಳಿದಿದ್ದ ಗುಂಡುಗಳು ಮನೆ ಖಾಲಿ ಮಾಡುವ ವೇಳೆ ಅವುಗಳ ಮಹತ್ವ ಅರಿಯದೇ ತಿಪ್ಪೆಗೆ ಎಸೆದಿದ್ದಾರೆ ಎನ್ನಲಾಗಿದೆ. ಇದೇ ಗುಂಡುಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಅನಗತ್ಯ ಆತಂಕಕ್ಕೆ ಕಾರಣವಾಗಿವೆ.&lt;/p&gt;&lt;p&gt;&lt;strong&gt;ಬಳಕೆಯಾದ ಗುಂಡುಗಳೇ?&lt;/strong&gt;&lt;/p&gt;&lt;p&gt;ಪತ್ತೆಯಾದ ಎಲ್ಲಾ 59 ಗುಂಡುಗಳೂ ಈಗಾಗಲೇ ಬಳಕೆಯಾದವುಗಳಾಗಿದ್ದು, ಅವುಗಳಿಂದ ಯಾವುದೇ ಅಪಾಯ ಇಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೂ ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳ ಬಗ್ಗೆ ಪರಿಶೀಲನೆ ಮುಂದುವರಿಸಿದ್ದಾರೆ.&lt;/p&gt;&lt;p&gt;&lt;strong&gt;ಮಾಜಿ ಸೈನಿಕನ ಹಿನ್ನೆಲೆ ಪರಿಶೀಲನೆ&lt;/strong&gt;&lt;/p&gt;&lt;p&gt;ಗುಂಡುಗಳು ಮಾಜಿ ಸೈನಿಕನ ಬಳಿ ಹೇಗೆ ಬಂದವು, ಅವುಗಳನ್ನು ಸಂಗ್ರಹಿಸಿಟ್ಟಿದ್ದಕ್ಕೆ ಕಾರಣವೇನು ಎಂಬುದರ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ ಪ್ರಕರಣ ಬೆಳಗಾವಿಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>belagavi</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/belagavi-59-bullets-found-in-pile-garbage-shocking-incident/articleshow-sgaqogi"/>
        </item>
        <item>
            <title><![CDATA[Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?]]></title>
            <link>https://kannada.asianetnews.com/karnataka-districts/jagadish-shettar-praises-12-years-of-modi-government-achievements-gvd/articleshow-ss2kso8</link>
            <guid isPermaLink="true">https://kannada.asianetnews.com/karnataka-districts/jagadish-shettar-praises-12-years-of-modi-government-achievements-gvd/articleshow-ss2kso8</guid>
            <pubDate>Sun, 14 Jun 2026 00:27:56 +0530</pubDate>
            <description><![CDATA[&lt;p&gt;BJP News: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆ, ಜನಪರ ಯೋಜನೆಗಳು ಹಾಗೂ ದೇಶದ ಅಭಿವೃದ್ಧಿ ಕುರಿತು ಸಂಸದ ಜಗದೀಶ ಶೆಟ್ಟರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hw6qx6pf4tna05fn0ccz4bzy,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜೂ.14): &lt;/strong&gt;ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷದಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ದೇಶದ ಕೋಟ್ಯಾಂತರ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಮಾತ್ರವಲ್ಲದೇ, ದೇಶದ ಸರ್ವತೋಮುಖ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.&lt;/p&gt;&lt;p&gt;ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು 4,399ಕ್ಕೂ ಅಧಿಕ ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ದೇಶದ ಇತಿಹಾಸದಲ್ಲೇ ದೀರ್ಘಾವಧಿ ಆಡಳಿತ ನಡೆಸಿದ ನಾಯಕರಲ್ಲಿ ಒಬ್ಬರಾಗಿದ್ದಾರೆ. ಈ ಮೂಲಕ ಈ ಹಿಂದೆ ಜವಾಹರಲಾಲ್ ನೆಹರು ಹೊಂದಿದ್ದ ದಾಖಲೆಯನ್ನು ಮುರಿದಿದ್ದಾರೆ. ಉತ್ತಮ ಹಾಗೂ ದಕ್ಷ ಆಡಳಿತ ಮತ್ತು ಜನಪರ ನೀತಿಗಳೇ ಈ ನಿರಂತರ ಯಶಸ್ಸಿಗೆ ಕಾರಣವಾಗಿದ್ದು, 2014ರಿಂದ ನಡೆದ ಪ್ರತಿಯೊಂದು ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ ಎಂದರು.&lt;/p&gt;&lt;p&gt;ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಶುದ್ಧ ಕುಡಿಯುವ ನೀರು ತಲುಪಿಸುವಲ್ಲಿ ದೊಡ್ಡ ಸಾಧನೆ ಆಗಿದ್ದು, ಕರ್ನಾಟಕದಲ್ಲಿ 87 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಮನೆಗಳಿಗೆ ನೀರು ಒದಗಿಸಲಾಗಿದೆ. ಜನದನ್&zwnj; ಯೋಜನೆಯಡಿ ರಾಜ್ಯದ 2.12 ಕೋಟಿ ಜನತೆಯನ್ನು ಬ್ಯಾಂಕಿಂಗ್&zwnj; ಕ್ಷೇತ್ರಕ್ಕೆ ತರಲಾಗಿದೆ. ಅದಲ್ಲದೇ, ಪಿಎಂ ಕಿಸಾನ್&zwnj;, ಮುದ್ರಾ ಯೋಜನೆಯಡಿ ಲಕ್ಷಾಂತರ ಜನರಿಗೆ ಯೋಜನೆಗಳ ಸೌಲಭ್ಯಗಳನ್ನು ಒದಗಿಸಿ, ಅಭಿವೃದ್ಧಿ ಜೊತೆಗೆ ಹೊಸ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವಿಶ್ವ ನಾಯಕರೊಂದಿಗೆ ಉತ್ತಮ ಸಂಬಂಧ ಬೆಳೆಸಿ ಭಾರತದ ಗೌರವ ತಂದು ಕೊಟ್ಟಿದ್ದಾರೆ ಎಂದು ವಿವರಿಸಿದರು.&lt;/p&gt;&lt;p&gt;ಬೆಳಗಾವಿಯಲ್ಲಿ ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ವಿಮಾನಗಳ ಸಂಖ್ಯೆ ಕಡಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಪರ್ಕ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೂ ಪ್ರಯತ್ನಿಸಲಾಗುತ್ತಿದೆ. ರಾಜ್ಯ ಸರ್ಕಾರವು ರೈಲ್ವೆ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಅನುದಾನ ನೀಡದಿರುವುದು ಕೆಲವೆಡೆ ಕುಂಠಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಕರ್ನಾಟಕದ ಅವಿಭಾಜ್ಯ ಅಂಗ&lt;/strong&gt;&lt;/h2&gt;&lt;p&gt;ಮರಾಠಿ ಭಾಷಿಕರ ಮತಗಳ ಓಲೈಕೆಗಾಗಿ ಬೆಜೆಪಿಯು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ನಿರ್ಣಯ ಅಂಗೀಕರಿಸಲು ನಿರಾಕರಿಸುತ್ತಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ ಶೆಟ್ಟರ್&zwnj;, ಬೆಳಗಾವಿ ನಗರ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮರಾಠಿ ಭಾಷಿಕರೇನು ಪಾಕಿಸ್ತಾನದವರಲ್ಲ, ಕನ್ನಡ ಹಾಗೂ ಮರಾಠಿ ಭಾಷಿಕರು ಇಲ್ಲಿ ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದಲೇ ಅಭಿವೃದ್ಧಿ ಸಾಧಿಸಬೇಕು. ಕನ್ನಡಪರ ಸಂಘಟನೆಗಳು ಆಗ್ರಹಿಸುತ್ತಿರುವಂತೆ ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಸೇರಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/jagadish-shettar-praises-12-years-of-modi-government-achievements-gvd/articleshow-ss2kso8"/>
        </item>
        <item>
            <title><![CDATA[Chetan Ahimsa: 2028ಕ್ಕೆ ರಾಜಕೀಯ ಅಖಾಡಕ್ಕೆ ನಟ ಚೇತನ್: 224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕೆ!]]></title>
            <link>https://kannada.asianetnews.com/karnataka-districts/chetan-ahimsa-new-political-party-karnataka-2028-election-224-seats-gvd/articleshow-w55peu6</link>
            <guid isPermaLink="true">https://kannada.asianetnews.com/karnataka-districts/chetan-ahimsa-new-political-party-karnataka-2028-election-224-seats-gvd/articleshow-w55peu6</guid>
            <pubDate>Sat, 20 Jun 2026 00:28:25 +0530</pubDate>
            <description><![CDATA[&lt;p&gt;Chetan Ahimsa: ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ತಮ್ಮ ತಮ್ಮ ಸ್ವಂತ ಹಿತಾಸಕ್ತಿಗಾಗಿ ರಾಜಕೀಯ ಮಾಡುತ್ತ ಭ್ರಷ್ಟಾಚಾರದಲ್ಲಿ ಮುಳುಗಿ ಸಂವಿಧಾನದ ಆಶಯವನ್ನು ಮರೆತಿವೆ ಎಂದು ಚಿತ್ರ ನಟ ಚೇತನ್ ಅಹಿಂಸಾ ದೂರಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvgg65dy02103w1qc06z12z1,imgname-mm-1781891536318.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಾಗವಾಡ (ಜೂ.20):&lt;/strong&gt; ದೇಶದಲ್ಲಿ ಈಗಿರುವ ಎಲ್ಲಾ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ತಮ್ಮ ತಮ್ಮ ಸ್ವಂತ ಹಿತಾಸಕ್ತಿಗಾಗಿ ರಾಜಕೀಯ ಮಾಡುತ್ತ ಭ್ರಷ್ಟಾಚಾರದಲ್ಲಿ ಮುಳುಗಿ ಸಂವಿಧಾನದ ಆಶಯವನ್ನು ಮರೆತಿವೆ ಎಂದು ಚಿತ್ರ ನಟ ಚೇತನ್ ಅಹಿಂಸಾ ದೂರಿದರು. ಬೆಳಗಾವಿ ಜಿಲ್ಲೆಯ ಕಾಗವಾಡ ಪ್ರವಾಸಿ ಮಂದಿರದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಆಡಳಿತ ನಡೆಸಿದ ಯಾವುದೇ ರಾಜಕೀಯ ಪಕ್ಷಗಳು ಕಿತ್ತೂರ ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಒತ್ತು ನೀಡದೆ ಬರೀ ಬೆಂಗಳೂರಿಗೆ ಒತ್ತು ನೀಡಿ ಈ ಭಾಗದ ಜನರಿಗೆ, ಯುವಕರಿಗೆ ಅನ್ಯಾಯ ಮಾಡುತ್ತಾ ಬಂದಿವೆ.&lt;/p&gt;&lt;p&gt;ಜನರು ಇದರಿಂದ ರೋಸಿ ಹೋಗಿದ್ದಾರೆ. ಅದಕ್ಕಾಗಿ ರಾಜ್ಯದ ಎಲ್ಲ 224 ಕ್ಷೇತ್ರದಲ್ಲಿ ಓಡಾಡಿ ಸಂವಿಧಾನದ ಆಶಯ ಎತ್ತಿ ಹಿಡಿಯುವ, ದಲಿತ ಸಂಘ ಬಹುಜನ ಸಂಘ, ಕಾರ್ಮಿಕ ಸಂಘ, ಭ್ರಷ್ಟಾಚಾರ ವಿರೋಧಿ ಸಂಘ, ಪರಿಸರವಾದಿ ಸಂಘ, ರೈತ ಸಂಘ, ಮಹಿಳಾ ಸಂಘ ಎಲ್ಲರ ಜೊತೆಗೆ ಕರ್ನಾಟಕದಲ್ಲಿ ಸಮ ಸಮಾಜ ನಿರ್ಮಾಣ ಮಾಡಿ ಬರುವ ಚುನಾವಣೆಯಲ್ಲಿ ಸಂವಿಧಾನದ ಶಕ್ತಿ ಕಟ್ಟಲಾಗುವುದು ಎಂದರು.&lt;/p&gt;&lt;p&gt;ಈಗಿರುವ ನಾಯಕರು ಈ ಭಾಗದ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿಲ್ಲ. ಈಗಿರುವ ಎಂಎಲ್ಎ ಎಂಪಿಗಳು ಯಾರಿಗೂ ದೂರದೃಷ್ಟಿ ಇಲ್ಲ. ಕರ್ನಾಟಕವನ್ನು ಅಭಿವೃದ್ಧಿ ಮಾಡಬೇಕು ಎನ್ನುವುದು ಯಾರ ಮನಸಿನಲ್ಲಿಯೂ ಇದ್ದಂತಿಲ್ಲ. ಎಲ್ಲವನ್ನೂ ವ್ಯಾಪಾರ ದೃಷ್ಟಿಯಿಂದ ನೋಡುತ್ತಿದ್ದಾರೆ. ದೇಶದಲ್ಲಿರುವ ಸುಮಾರು 3 ಸಾವಿರ ರಾಜಕೀಯ ಪಕ್ಷಗಳು ಸಂವಿಧಾನದ ಮೂಲ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ.&lt;/p&gt;&lt;h2&gt;&lt;strong&gt;224 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕೆ&lt;/strong&gt;&lt;/h2&gt;&lt;p&gt;ಹೀಗಾಗಿ ಅಭಿವ್ಯಕ್ತಿ, ಪ್ರತಿಭಟನೆ ಹಾಗೂ ಮಾಧ್ಯಮ ಸ್ವಾತಂತ್ರ್ಯವನ್ನು ಕಾಪಾಡುವುದು, ಲೋಕಾಯುಕ್ತ ಬಲಪಡಿಸಿ ಲಂಚಮುಕ್ತ ಕರ್ನಾಟಕ ಗುರಿಯೊಂದಿಗೆ ಪಾರದರ್ಶಕ ಆಡಳಿತ ನೀಡುವುದು ಘನ ಉದ್ದೇಶ ನಮ್ಮದಾಗಿದೆ. ಹೀಗಾಗಿ ಮುಂಬರುವ 2028ಕ್ಕೆ ಹೊಸಪಕ್ಷ ಕಟ್ಟಿ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ನಾನು ರಾಜ್ಯದ ಮೂಲೆ, ಮೂಲೆಗಳಿಗೆ ಹೋಗಿ ಯುವಕರ ಸಂಘಟನೆಯನ್ನು ಮಾಡುತ್ತಿದ್ದೇನೆ. ಎಲ್ಲ ಕಡೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chetan-ahimsa-new-political-party-karnataka-2028-election-224-seats-gvd/articleshow-w55peu6"/>
        </item>
        <item>
            <title><![CDATA[ಬೆಳಗಾವಿ: ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!]]></title>
            <link>https://kannada.asianetnews.com/karnataka-districts/belagavi-shockers-man-poisons-and-strangles-wife-to-continue-affair-with-widow-gdp/articleshow-xlg0f1g</link>
            <guid isPermaLink="true">https://kannada.asianetnews.com/karnataka-districts/belagavi-shockers-man-poisons-and-strangles-wife-to-continue-affair-with-widow-gdp/articleshow-xlg0f1g</guid>
            <pubDate>Wed, 17 Jun 2026 17:44:51 +0530</pubDate>
            <description><![CDATA[ಬೆಳಗಾವಿ ಜಿಲ್ಲೆಯಲ್ಲಿ, ವಿಧವೆಯೊಂದಿಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದಾನೆ. ದೇವಸ್ಥಾನದ ಪ್ರಸಾದವೆಂದು ವಿಷ ಬೆರೆಸಿದ ಪಾನೀಯ ನೀಡಿ, ನಂತರ ಕತ್ತು ಹಿಸುಕಿ ಕೊಂದು, ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ. ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲಾಗಿದ್ದು, ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvar03frtsvt9ygz5wv2nqg3,imgname-belagavi-wife-murder-1781698399736.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ವಿಧವೆಯೊಂದಿಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಪತ್ನಿಯನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಶಿಂದಿಕುರಬೆಟ್ ಗ್ರಾಮದ ಸಕ್ಕುಬಾಯಿ ಪಟಾಯತ್ (28) ಕೊಲೆಯಾದ ದುರ್ದೈವಿ. ಪ್ರಕರಣ ಸಂಬಂಧ ಆಕೆಯ ಪತಿ ಸಂತೋಷ್ ಪಟಾಯತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;h2&gt;ದೇವಸ್ಥಾನದ ಪ್ರಸಾದವೆಂದು ವಿಷದ ಪಾನೀಯ ನೀಡಿದ ಪತಿ&lt;/h2&gt;&lt;p&gt;ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂತೋಷ್ ಪಟಾಯತ್ ತನ್ನ ಪತ್ನಿ ಸಕ್ಕುಬಾಯಿಯನ್ನು ಅಧಿಕ ಮಾಸದ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನಕ್ಕಾಗಿ ಕರೆದುಕೊಂಡು ಹೋಗಿದ್ದನು. ದೇವಸ್ಥಾನದಲ್ಲಿ ಪೂಜೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ಇಬ್ಬರೂ ಊರಿಗೆ ಹಿಂತಿರುಗುತ್ತಿದ್ದರು.&lt;/p&gt;&lt;p&gt;ಮಾರ್ಗಮಧ್ಯೆ ನಿರ್ಜನ ಪ್ರದೇಶವೊಂದರಲ್ಲಿ ಬೈಕ್ ನಿಲ್ಲಿಸಿದ ಸಂತೋಷ್, ಮೊದಲೇ ಯೋಜಿಸಿದಂತೆ ತಂಪು ಪಾನೀಯದಲ್ಲಿ ಇಲಿಪಾಷಣ ಹಾಗೂ ಬಳೆಯ ಗಾಜಿನ ಚೂರುಗಳ ಪುಡಿಯನ್ನು ಬೆರೆಸಿದ್ದನು. ಅದನ್ನು ದೇವಸ್ಥಾನದ ಪವಿತ್ರ ಪ್ರಸಾದ ಎಂದು ನಂಬಿಸಿ ಪತ್ನಿಯ ಕೈಗೆ ನೀಡಿ ಕುಡಿಯುವಂತೆ ಮಾಡಿದ್ದಾನೆ. ಪತಿಯ ಮಾತನ್ನು ಸಂಪೂರ್ಣವಾಗಿ ನಂಬಿ ಆ ಪಾನೀಯವನ್ನು ಕುಡಿದ ಸಕ್ಕುಬಾಯಿ, ಕೆಲವೇ ನಿಮಿಷಗಳಲ್ಲಿ ತೀವ್ರ ಹೊಟ್ಟೆನೋವಿನಿಂದ ನರಳಿ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆಕೆ ಸಂಪೂರ್ಣವಾಗಿ ಅಸಹಾಯಕ ಸ್ಥಿತಿಗೆ ತಲುಪುತ್ತಿದ್ದಂತೆ, ರಸ್ತೆಬದಿಯಲ್ಲೇ ಆಕೆಯ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಸಂತೋಷ್ ಕೊಲೆ ಮಾಡಿದ್ದಾನೆ.&lt;/p&gt;&lt;h2&gt;ಅಪಘಾತದ ಡ್ರಾಮಾ ಮಾಡಿ ತಾನೇ ಪೊಲೀಸರಿಗೆ ಕರೆ ಮಾಡಿದ!&lt;/h2&gt;&lt;p&gt;ಕೊಲೆಯ ನಂತರ ಸಿಕ್ಕಿಬೀಳುವ ಭಯದಿಂದ ತಪ್ಪಿಸಿಕೊಳ್ಳಲು ಸಂತೋಷ್ ಹೈಡ್ರಾಮಾ ಮಾಡಿದ್ದಾನೆ. ಸಕ್ಕುಬಾಯಿಯ ಶವದ ಮೇಲೆ ತಾನು ಬಂದಿದ್ದ ಮೋಟಾರ್ ಸೈಕಲ್ ಅನ್ನು ಎಸೆದು, ಇದೊಂದು ಭೀಕರ ರಸ್ತೆ ಅಪಘಾತ ಎಂಬಂತೆ ಬಿಂಬಿಸಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಯಾರಿಗೂ ಸಂಶಯ ಬಾರದಂತೆ ಕೆಲವು ಗಂಟೆಗಳ ಕಾಲ ರಸ್ತೆ ಪಕ್ಕದಲ್ಲಿಯೇ ಮೃತದೇಹದೊಂದಿಗೆ ಕಾಲ ಕಳೆದಿದ್ದಾನೆ. ತದನಂತರ ತಾನೇ ಸ್ವತಃ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ತನ್ನ ಪತ್ನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಹೇಳಿದ್ದಾನೆ.&lt;/p&gt;&lt;h2&gt;ಬಿಐಎಂಎಸ್ (BIMS) ಮರಣೋತ್ತರ ಪರೀಕ್ಷೆಯಲ್ಲಿ ಬಯಲಾದ ಸತ್ಯ&lt;/h2&gt;&lt;p&gt;ಸ್ಥಳಕ್ಕೆ ಧಾವಿಸಿದ ಪೊಲೀಸರು ಸಕ್ಕುಬಾಯಿ ಸಾವಿನ ಸುತ್ತಲಿನ ಸನ್ನಿವೇಶಗಳು ಮತ್ತು ಸಂತೋಷ್ ನೀಡಿದ ಹೇಳಿಕೆಗಳ ನಡುವೆ ತಾಳೆಯಾಗದೇ ತೀವ್ರ ಅನುಮಾನ ವ್ಯಕ್ತಪಡಿಸಿದರು. ಕೂಡಲೇ ಶವವನ್ನು ವಶಕ್ಕೆ ಪಡೆದು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (BIMS) ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದರು. ಬಿಐಎಂಎಸ್ ವೈದ್ಯರು ನೀಡಿದ ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯು ಇದೊಂದು ಅಪಘಾತವಲ್ಲ, ಬದಲಿಗೆ ವಿಷ ಉಣಿಸಿ, ಕತ್ತು ಹಿಸುಕಿ ಮಾಡಲಾದ ವ್ಯವಸ್ಥಿತ ಕೊಲೆ ಎಂಬುದನ್ನು ಬಯಲಿಗೆಳೆಯಿತು. ಈ ವರದಿಯ ಆಧಾರದ ಮೇಲೆ ಪೊಲೀಸರು ಸಂತೋಷ್&zwnj;ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆತ ತನ್ನ ಹೆಂಡತಿಯನ್ನು ತಾನೇ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.&lt;/p&gt;&lt;h2&gt;ನಾಲ್ಕು ವರ್ಷಗಳ ಅಕ್ರಮ ಸಂಬಂಧವೇ ಕೊಲೆಗೆ ಕಾರಣ&lt;/h2&gt;&lt;p&gt;ಪೊಲೀಸ್ ತನಿಖೆಯ ವೇಳೆ ಸಂತೋಷ್ ತನ್ನ ಕೊಲೆಯ ಹಿಂದಿನ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದಾನೆ. ಮೂಲತಃ ಧಾರವಾಡ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಯಾದ ಸಂತೋಷ್ ಮತ್ತು ಸಕ್ಕುಬಾಯಿ ಅವರ ವಿವಾಹವಾಗಿ 9 ವರ್ಷಗಳಾಗಿದ್ದವು. ದಾಂಪತ್ಯ ಜೀವನ ಚೆನ್ನಾಗಿಯೇ ಸಾಗುತ್ತಿತ್ತು. ಆದರೆ, ಕಳೆದ 4 ವರ್ಷಗಳಿಂದ ಸಂತೋಷ್ ತನ್ನ ಸ್ವಗ್ರಾಮದ ವಿಧವೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು ಎಂದು ತಿಳಿದುಬಂದಿದೆ. ತನ್ನ ಪ್ರಿಯತಮೆಯೊಂದಿಗೆ ಉಳಿದ ಜೀವನವನ್ನು ಪೂರ್ತಿಯಾಗಿ ಕಳೆಯಲು ಪತ್ನಿ ಸಕ್ಕುಬಾಯಿ ಅಡ್ಡಿಯಾಗಿದ್ದಾಳೆ ಎಂದು ಭಾವಿಸಿದ ಆತ, ಪತ್ನಿಗೆ ಚಟ್ಟ ಕಟ್ಟಿದ್ದಾನೆ.&lt;/p&gt;&lt;h2&gt;ಹಿಂಡಲಗಾ ಜೈಲು ಪಾಲಾದ ಆರೋಪಿ&lt;/h2&gt;&lt;p&gt;ಪ್ರಸ್ತುತ ಆರೋಪಿ ಸಂತೋಷ್ ಪಟಾಯತ್&zwnj;ನನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿ, ನ್ಯಾಯಾಲಯದ ಆದೇಶದ ಮೇರೆಗೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ. ಈ ಭೀಕರ ಕೊಲೆ ಪ್ರಕರಣದಲ್ಲಿ ಸಂತೋಷ್&zwnj;ನ ಪ್ರಿಯತಮೆಯಾಗಿರುವ ಆ ವಿಧವೆಯ ಪಾತ್ರ ಅಥವಾ ಪ್ರಚೋದನೆ ಏನಾದರೂ ಇದೆಯೇ ಎಂಬ ಅನುಮಾನದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/belagavi-shockers-man-poisons-and-strangles-wife-to-continue-affair-with-widow-gdp/articleshow-xlg0f1g"/>
        </item>
    </channel>
</rss>
