<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 16 Jul 2026 09:31:33 +0530</lastBuildDate>
        <atom:link href="https://kannada.asianetnews.com/rss/belagavi" rel="self" type="application/rss+xml"/>
        <item>
            <title><![CDATA[ಮುಂಗಾರು ಮಳೆ ಆರ್ಭಟ: ತುಂಬಿದ ಜಲಾಶಯ, ಮುಳುಗಿದ ಸೇತುವೆಗಳು, ರೈತರ ಮೊಗದಲ್ಲಿ ಮಂದಹಾಸ]]></title>
            <link>https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w</link>
            <guid isPermaLink="true">https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w</guid>
            <pubDate>Mon, 06 Jul 2026 05:35:19 +0530</pubDate>
            <description><![CDATA[ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮಲೆನಾಡು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗದ ಗಾಜನೂರು ಜಲಾಶಯ ಈ ಸಾಲಿನಲ್ಲಿ ಮೊದಲ ಬಾರಿಗೆ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಅಲ್ಲದೆ, ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಾನಿ ಸಂಭವಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtbqh2azxfnjry4s9a27fas,imgname-dam-1783296148554.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಶೃಂಗೇರಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾನದಿ ಮೈದುಂಬಿ ಹರಿಯುತ್ತಿದ್ದು, ಗಾಜನೂರು ಜಲಾಶಯ ಭರ್ತಿಯಾಗಿದೆ. ಇದೇ ವೇಳೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಗೆ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನದಿಯಲ್ಲಿ ಒಳಹರಿವು ಹೆಚ್ಚಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾನದಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆಯ ಗಾಜನೂರು ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.&amp;nbsp;&lt;/p&gt;&lt;h2&gt;&lt;strong&gt;ಮೊದಲು ಭರ್ತಿಯಾದ ಜಲಾಶಯ&lt;/strong&gt;&lt;/h2&gt;&lt;p&gt;ಈ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಲಾಶಯಕ್ಕೆ 19,708 ಕ್ಯುಸೆಕ್ ಒಳಹರಿವಿದ್ದು, 8 ಕ್ರಸ್ಟ್ ಗೇಟ್&zwnj;ಗಳ ಮೂಲಕ 18,051 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 588.21 ಮೀಟರ್ (ಗರಿಷ್ಠ 588.24 ಮೀಟರ್&zwnj;) ತಲುಪಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಸದ್ಯ 15 ಸಾವಿರ ಕ್ಯುಸೆಕ್&zwnj; ನೀರು ಹರಿದು ಬರುತ್ತಿದ್ದು, ಜಲಾಶಯದ ಮಟ್ಟ 1749.85 ಅಡಿಗೆ ಏರಿಕೆ ಕಂಡಿದೆ.&lt;/p&gt;&lt;p&gt;ಇದೇ ವೇಳೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜಿಲ್ಲೆಯ ಮಲಪ್ರಭಾ, ಕೃಷ್ಣಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳಿಗೆ ಒಳಹರಿವು ಹೆಚ್ಚಿದೆ. ಖಾನಾಪುರದ ಕಣಕುಂಬಿ ಅರಣ್ಯಪ್ರದೇಶದಲ್ಲಿ ಮಲಪ್ರಭಾ ನದಿ ದಡದಲ್ಲಿರುವ ಹಬ್ಬಾನಟ್ಟಿ ಗ್ರಾಮದ ಪುರಾತನ ಮಾರುತಿ ಮಂದಿರ ಭಾಗಶಃ ಜಲಾವೃತಗೊಂಡಿದೆ.&lt;/p&gt;&lt;h3&gt;&lt;strong&gt;ಕೃಷ್ಣೆಗೆ 55 ಸಾವಿರ ಕ್ಯುಸೆಕ್&zwnj;ಗೂ ಅಧಿಕ ಒಳಹರಿವು&lt;/strong&gt;&lt;/h3&gt;&lt;p&gt;ಜಿಲ್ಲೆಯ ಜೀವನದಿ ಕೃಷ್ಣೆಗೆ ಭಾನುವಾರ 55 ಸಾವಿರ ಕ್ಯುಸೆಕ್&zwnj;ಗೂ ಅಧಿಕ ಒಳಹರಿವಿದ್ದು, ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಘಟಪ್ರಭಾ ನದಿಗೆ 1,600ಕ್ಕೂ ಅಧಿಕ ಕ್ಯುಸೆಕ್&zwnj; ನೀರು ಹರಿದು ಬರುತ್ತಿದ್ದು, ಗೋಕಾಕ ಫಾಲ್ಸ್&zwnj; ಜಲಪಾತಕ್ಕೆ ಜೀವಕಳೆ ಬಂದಿದೆ. ಹಿಡಕಲ್&zwnj; ಜಲಾಶಯದ ನೀರಿನ ಮಟ್ಟ ಭಾನುವಾರ ಒಂದೂವರೆ ಅಡಿಯಷ್ಟು ಏರಿಕೆಯಾಗಿದೆ.&lt;/p&gt;&lt;p&gt;ಇದೇ ವೇಳೆ, ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಆರೇಹಳ್ಳಿ ಬೀದಿ ಸಮೀಪ ನಿರ್ಮಾಣ ಹಂತದ ಲೇಔಟ್&zwnj;ಗಾಗಿ ಕಟ್ಟಿದ್ದ ತಡೆಗೋಡೆ ಸಂಪೂರ್ಣ ಕುಸಿದು ಹಾನಿ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಾರವಾರ ತಾಲೂಕಿನ ಬೋಳ್ವೆಯಲ್ಲಿ ಮರದ ಟೊಂಗೆಯೊಂದು ಮುರಿದು ಬಿದ್ದು ಕಾರು ಜಖಂಗೊಂಡಿದೆ. ಧಾರವಾಡದಲ್ಲಿ ಕೆಲವೆಡೆ ಮರಗಳು ಧರೆಗುರುಳಿವೆ. ಕೊಂಬೆಗಳು ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಬಿದ್ದ ಪರಿಣಾಮ ಭಾನುವಾರ ಹಲವು ಬಡಾವಣೆಗಳಲ್ಲಿ ವಿದ್ಯುತ್&zwnj; ಸಂಪರ್ಕ ಕಡಿತಗೊಂಡಿತ್ತು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karnataka-monsoon-rains-filled-reservoirs-submerged-bridges-farmers-smiles-mrq/articleshow-253zw5w"/>
        </item>
        <item>
            <title><![CDATA[ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು!]]></title>
            <link>https://kannada.asianetnews.com/karnataka-districts/karnataka-state-heavy-rain-alert-dakshina-kannada-and-belagavi-districts-schools-holiday-declare/articleshow-2cnl3ny</link>
            <guid isPermaLink="true">https://kannada.asianetnews.com/karnataka-districts/karnataka-state-heavy-rain-alert-dakshina-kannada-and-belagavi-districts-schools-holiday-declare/articleshow-2cnl3ny</guid>
            <pubDate>Tue, 07 Jul 2026 21:12:40 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯ ಮುನ್ಸೂಚನೆಯಿಂದಾಗಿ ದಕ್ಷಿಣ ಕನ್ನಡ, ಕೊಡಗು ಮತ್ತು ಬೆಳಗಾವಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ದಕ್ಷಿಣ ಕನ್ನಡದಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwyksvc1vzsqmdx8s8d0hke6,imgname-karnataka-rain-school-holiday--1--1783438830977.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಆಯ್ದ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' - ಜಿಲ್ಲೆಯಾದ್ಯಂತ ರಜೆ:&lt;/p&gt;&lt;p&gt;ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹವಾಮಾನ ಇಲಾಖೆಯು 'ರೆಡ್ ಅಲರ್ಟ್' ಘೋಷಿಸಿದೆ. ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PUC) ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಮಂಗಳೂರು ಸೇರಿದಂತೆ ಎಲ್ಲಾ ತಾಲೂಕುಗಳಿಗೂ ಈ ಆದೇಶ ಅನ್ವಯಿಸಲಿದೆ.&lt;/p&gt;&lt;h2&gt;&lt;strong&gt;ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ:&lt;/strong&gt;&lt;/h2&gt;&lt;p&gt;ಇತ್ತ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮೂರು ಪ್ರಮುಖ ತಾಲೂಕುಗಳಾದ ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಈ ಮೂರು ತಾಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಲೆನಾಡು ಭಾಗವಾಗಿರುವ ಖಾನಾಪುರದಲ್ಲಿ ಮಳೆ ಹೆಚ್ಚಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸೂಚನೆ:&lt;/strong&gt;&lt;/h2&gt;&lt;p&gt;ಮಳೆ ಹೆಚ್ಚಾಗಿರುವುದರಿಂದ ನದಿ ತೀರ, ಸಮುದ್ರ ತೀರ ಹಾಗೂ ವಿದ್ಯುತ್ ಕಂಬಗಳ ಹತ್ತಿರ ಹೋಗದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತಗಳು ಎಚ್ಚರಿಕೆ ನೀಡಿವೆ. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂಗೆ ಕರೆ ಮಾಡಲು ಸೂಚಿಸಲಾಗಿದೆ. ಪದವಿ ಮತ್ತು ಇತರೆ ಉನ್ನತ ಶಿಕ್ಷಣ ಸಂಸ್ಥೆಗಳ ಬಗ್ಗೆ ಆಯಾ ಸಂಸ್ಥೆಗಳ ಮುಖ್ಯಸ್ಥರು ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-state-heavy-rain-alert-dakshina-kannada-and-belagavi-districts-schools-holiday-declare/articleshow-2cnl3ny"/>
        </item>
        <item>
            <title><![CDATA[ಜಾಕ್‌ವೆಲ್‌ ಮೂಲಕ ಹಿರಣ್ಯಕೇಶಿ ನದಿಯಿಂದ 33 ಕೆರೆಗೆ ನೀರು ತುಂಬಿಸುವ ಯೋಜನೆಗೆ ಚಾಲನೆ]]></title>
            <link>https://kannada.asianetnews.com/karnataka-districts/belagavi-project-to-fill-33-lakes-with-water-from-hiranyakeshi-river-through-jackwell-launched-mla-nikhil-katti-mrq/articleshow-39i0hfl</link>
            <guid isPermaLink="true">https://kannada.asianetnews.com/karnataka-districts/belagavi-project-to-fill-33-lakes-with-water-from-hiranyakeshi-river-through-jackwell-launched-mla-nikhil-katti-mrq/articleshow-39i0hfl</guid>
            <pubDate>Sun, 05 Jul 2026 08:08:59 +0530</pubDate>
            <description><![CDATA[ಶಾಸಕ ನಿಖಿಲ್ ಕತ್ತಿ ಅವರು ಹುಕ್ಕೇರಿ ಹಾಗೂ ನೆರೆಯ ತಾಲೂಕುಗಳ 33 ಕೆರೆಗಳಿಗೆ ಹಿರಣ್ಯಕೇಶಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದರು. ಈ ಯೋಜನೆಯು ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗಲಿದೆ. ಇದೇ ವೇಳೆ, ಅವರು ಸಂಕೇಶ್ವರ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಸೇರಿದಂತೆ ಇತರ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಮಾತನಾಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kwr20gfsx6xfph77082gbr2w,imgname-sankeshwara-1783218848249.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ರೈತರ ಕೃಷಿ ಚಟುವಟಿಕೆಗಳಿಗೆ ಆಸರೆಯಾಗುವ ಹಾಗೂ ಅಂತರ್ಜಲಮಟ್ಟ ವೃದ್ಧಿಸುವ ಉದ್ದೇಶದಿಂದ ಹಿರಣ್ಯಕೇಶಿ ನದಿಯಿಂದ ಹುಕ್ಕೇರಿ ತಾಲೂಕಿನ 22 ಹಾಗೂ ನೆರೆಯ ತಾಲೂಕುಗಳ 11 ಸೇರಿ ಒಟ್ಟು 33 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ನಿಖಿಲ್ ಕತ್ತಿ ಚಾಲನೆ ನೀಡಿದರು.&lt;/p&gt;&lt;p&gt;ಪಟ್ಟಣದ ಹಿರಣ್ಯಕೇಶಿ ನದಿಯಲ್ಲಿ ನಿರ್ಮಿಸಿರುವ ಜಾಕ್&zwnj;ವೆಲ್&zwnj;ಗಳ ಮೂಲಕ ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಕೃಷಿ ಉತ್ಪಾದನೆ ಹೆಚ್ಚಿಸುವುದರ ಜೊತೆಗೆ ಪರಿಸರ ಸಮತೋಲನ ಕಾಪಾಡಲು ಮತ್ತು ಅಂತರ್ಜಲ ಮರುಪೂರಣಕ್ಕೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು.&lt;/p&gt;&lt;p&gt;ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಗೆ ಆದ್ಯತೆ ನೀಡಿದೆ. ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘಕ್ಕೆ ಸರ್ಕಾರದಿಂದ ಜಾಕ್&zwnj;ವೆಲ್ ವಿದ್ಯುತ್ ಬಿಲ್ ಮೊತ್ತ ಬಾಕಿಯಿದ್ದರೂ, ರೈತರಿಗೆ ಯಾವುದೇ ತೊಂದರೆಯಾಗದಂತೆ ನೀರು ಹರಿಸುವ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;ಶ್ರೀ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಮೇಲೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪರಿಶೀಲನೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾರ್ಖಾನೆಯ ನೂತನ ಆಡಳಿತ ಮಂಡಳಿಯಿಂದ ನಿಯಮಾನುಸಾರ ದಾಖಲೆಗಳ ಸಲ್ಲಿಕೆ ಹಾಗೂ ಅಗತ್ಯ ಪ್ರಕ್ರಿಯೆಗಳ ಅನುಸರಣೆಯಲ್ಲಿ ಕೆಲವು ತಾಂತ್ರಿಕ ಲೋಪಗಳಾಗಿರುವ ಸಾಧ್ಯತೆ ಇದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಸಂಕೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ&lt;/strong&gt;&lt;/h2&gt;&lt;p&gt;ಸಂಕೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಬಗ್ಗೆ ಮಾತನಾಡಿ, ತಾತ್ಕಾಲಿಕ ವ್ಯವಸ್ಥೆಯಾಗಿ ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಹೆರಿಗೆ ತಜ್ಞರನ್ನು ಅಗತ್ಯವಿರುವ ದಿನಗಳಲ್ಲಿ ಸಂಕೇಶ್ವರ ಆಸ್ಪತ್ರೆಗೆ ನಿಯೋಜಿಸಲಾಗುವುದು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಶಾಶ್ವತವಾಗಿ ನಿವಾರಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.&lt;/p&gt;&lt;p&gt;ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರ ಅಡ್ಡಮತದಾನ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದ ವಿಪ್&zwnj;ಗೆ ಅನುಗುಣವಾಗಿ ಅಧಿಕೃತ ಅಭ್ಯರ್ಥಿಗೆ ಮತ ಚಲಾಯಿಸಲಾಗಿದ್ದು, ಪಕ್ಷದ ಶಿಸ್ತಿಗೆ ಬದ್ಧವಾಗಿ ನಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಮುಖಂಡರಾದ ಸುನೀಲ ಪರ್ವತರಾವ, ಶಿವಾನಂದ ಮುಡಶಿ, ಪ್ರಶಾಂತ ಪಾಟೀಲ, ರೋಹನ ನೇಸರಿ, ನಾಗೇಶ ಸಂಕಣ್ಣವರ, ದೀಪಕ್ ಬಿಶೆ, ಶಂಕರ ಹೆಬ್ಬಾಳೆ, ವಿಜಯ ಜರಳಿ, ಚೇತನ ಬಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ, ಗುತ್ತಿಗೆದಾರ ಬಸವರಾಜ ಗಂಗಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-project-to-fill-33-lakes-with-water-from-hiranyakeshi-river-through-jackwell-launched-mla-nikhil-katti-mrq/articleshow-39i0hfl"/>
        </item>
        <item>
            <title><![CDATA[ಕರ್ನಾಟಕದಲ್ಲಿನ ಮರಾಠಿ ಹೋರಾಟಗಾರರ ಪರ ಮಹಾರಾಷ್ಟ್ರ ಸಿಎಂ ದೊಡ್ಡ ಘೋಷಣೆ! ಸುಪ್ರೀಂಗೆ ಅರ್ಜಿ]]></title>
            <link>https://kannada.asianetnews.com/india-news/maharashtra-panel-to-seek-early-hearing-of-belagavi-border-dispute-case-in-supreme-court-rav/articleshow-3mrs8sp</link>
            <guid isPermaLink="true">https://kannada.asianetnews.com/india-news/maharashtra-panel-to-seek-early-hearing-of-belagavi-border-dispute-case-in-supreme-court-rav/articleshow-3mrs8sp</guid>
            <pubDate>Thu, 09 Jul 2026 07:37:08 +0530</pubDate>
            <description><![CDATA[&lt;p&gt;ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್&zwnj;, ಸುಪ್ರೀಂಕೋರ್ಟ್&zwnj;ನಲ್ಲಿ ತ್ವರಿತ ವಿಚಾರಣೆಗೆ ಅರ್ಜಿ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ, ಕರ್ನಾಟಕದಲ್ಲಿನ ಮರಾಠಿ ಪರ ಹೋರಾಟಗಾರರಿಗೆ ಕಾನೂನು ನೆರವು ನೀಡುವುದಾಗಿ ಘೋಷಿಸಿದ್ದಾರೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx29k1td888m9x0swmpxsyh5,imgname-----------------------2026-07-09t072830.482-1783562340173.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮುಂಬೈ (ಜು.9):&lt;/strong&gt; ಕರ್ನಾಟಕದ ಅವಿಭಾಜ್ಯ ಅಂಗವಾದ ಬೆಳಗಾವಿ ಕುರಿತು ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್&zwnj;, ಬೆಳಗಾವಿ ಗಡಿ ವಿವಾದ(belagavi border dispute) ಸಂಬಂಧ ಸುಪ್ರೀಂಕೋರ್ಟ್&zwnj;(Supreme court)ನಲ್ಲಿ ತ್ವರಿತ ವಿಚಾರಣೆ ಕೋರಿ ಅರ್ಜಿ ಸಲ್ಲಿಸುವ, ಕರ್ನಾಟದಲ್ಲಿನ ಮರಾಠಿ ಪರ ಹೋರಾಟಗಾರರಿಗೆ ಎಲ್ಲಾ ರೀತಿಯ ಕಾನೂನು ನೆರವು ನೀಡುವ ಮತ್ತು ರಾಷ್ಟ್ರೀಯ ಭಾಷಾ ಅಲ್ಪಸಂಖ್ಯಾತರ ಆಯೋಗಕ್ಕೆ ದೂರು ನೀಡುವ ಘೋಷಣೆ ಮಾಡಿದ್ದಾರೆ.&lt;/p&gt;&lt;h2&gt;ಮಾತುಕತೆ ಮೂಲಕ ಇತ್ಯರ್ಥಕ್ಕೆ ಮನವಿ&lt;/h2&gt;&lt;p&gt;ಇದರ ಜೊತೆಜೊತೆಗೇ ನ್ಯಾಯಾಲಯದ ಹೊರಗೆ ಮಾತುಕತೆ ಮೂಲಕ ವಿಷಯ ಇತ್ಯರ್ಥ ಸಂಬಂಧ ಮಹಾರಾಷ್ಟ್ರ ಮತ್ತು ಕರ್ನಾಟಕದ ತಲಾ ಮೂರು ಸಚಿವರ ಸಭೆ ಆಯೋಜಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್&zwnj; ಶಾಗೆ ಮನವಿ ಮಾಡುವುದಾಗಿಯೂ ತಿಳಿಸಿದ್ದಾರೆ.&lt;/p&gt;&lt;h3&gt;ಗಡಿ ವಿವಾದ ಸಂಬಂಧ ಉನ್ನತ ಮಟ್ಟದ ಸಭೆ&lt;/h3&gt;&lt;p&gt;ಗಡಿ ವಿವಾದ ಸಂಬಂಧ ಬುದವಾರ ಇಲ್ಲಿನ ವಿಧಾನಭವನದಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿತ್ತು. ಇದರಲ್ಲಿ ಸರ್ಕಾರದ ಹಿರಿಯ ಸಚಿವರು, ವಿಪಕ್ಷ ನಾಯಕರು ಮತ್ತು ಕರ್ನಾಟಕದ ಮರಾಠಿ ಭಾಷಿಕರ ನಿಯೋಗ ಭಾಗಿಯಾಗಿತ್ತು. ಎನ್&zwnj;ಸಿಪಿ (ಪವಾರ್&zwnj; ಬಣ) ನಾಯಕ ಶರದ್&zwnj; ಪವಾರ್&zwnj; ಕೂಡ 3 ದಶಕಗಳ ಬಳಿಕ ವಿಧಾನಭವನದಲ್ಲಿ ನಡೆದ ಈ ಸಭೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದರು.&lt;/p&gt;&lt;p&gt;ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್&zwnj;, &lsquo;ಮಹಾರಾಷ್ಟ್ರ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದೆ. ಇಡೀ ಮಹಾರಾಷ್ಟ್ರದ ಜನತೆ ಗಡಿ ಭಾಗದಲ್ಲಿರುವ ಮರಾಠಿಗರ ಪರವಾಗಿ ನಿಲ್ಲಲಿದೆ. ಮರಾಠಿ ಭಾಷಿಕ ಹೋರಾಟಗಾರರಿಗೆ ಅಗತ್ಯವಾದ ಎಲ್ಲಾ ಕಾನೂನು, ಆರ್ಥಿಕ ನೆರವು ನೀಡಲು ಸರ್ಕಾರ ಸಿದ್ಧ&rsquo; ಎಂದು ಭರವಸೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;2004ರಿಂದಲೂ ಸುಪ್ರೀಂ ಅಂಗಳದಲ್ಲಿರುವ ಅಂತರರಾಜ್ಯ ಗಡಿ ವಿವಾದ&lt;/strong&gt;&lt;/p&gt;&lt;p&gt;ಜೊತೆಗೆ, &lsquo;ಕರ್ನಾಟಕದಲ್ಲಿ ಮರಾಠಿಗರ ಸಮಸ್ಯೆಯನ್ನು ಸಂಸದರ ಮೂಲಕ ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಗಮನಕ್ಕೆ ತರಲಾಗುವುದು. 2004ರಿಂದಲೂ ಸುಪ್ರೀಂ ಅಂಗಳದಲ್ಲಿರುವ ಅಂತರರಾಜ್ಯ ಗಡಿ ವಿವಾದದ ಬಗ್ಗೆ ತ್ವರಿತ ವಿಚಾರಣೆ ನಡೆಸುವಂತೆ ಹೊಸ ಅರ್ಜಿ ಸಲ್ಲಿಸುತ್ತೇವೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗಡಿಯಲ್ಲಿರುವ ಮರಾಠಿಗರ ವಿರುದ್ಧ ಪ್ರಕರಣಗಳಿದ್ದರೆ ನಾವೇ ವಕೀಲರನ್ನು ನೇಮಿಸಿ, ಅವರ ವೆಚ್ಚವನ್ನು ಭರಿಸುತ್ತೇವೆ&rsquo; ಎಂದು ಸಭೆಗೆ ಮುಖ್ಯಮಂತ್ರಿ ಭರವಸೆ ನೀಡಿದರು ಎನ್ನಲಾಗಿದೆ.&lt;/p&gt;&lt;p&gt;ಜತೆಗೆ &lsquo;ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ಮತ್ತೊಂದೆಡೆ ನ್ಯಾಯಾಲಯದ ಹೊರಗೆ ಪ್ರಕರಣ ಇತ್ಯರ್ಥದ ಸಾಧ್ಯತೆ ಬಗ್ಗೆ ಮಾತುಕತೆ ನಡೆಸಲು ಮಹಾರಾಷ್ಟ್ರ ಮತ್ತು ಕರ್ನಾಟಕದ ತಲಾ ಮೂವರು ಸಚಿವರ ಸಭೆ ಆಯೋಜಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು&rsquo; ಎಂದು ಫಡ್ನವೀಸ್&zwnj; ಹೇಳಿದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/india-news/maharashtra-panel-to-seek-early-hearing-of-belagavi-border-dispute-case-in-supreme-court-rav/articleshow-3mrs8sp"/>
        </item>
        <item>
            <title><![CDATA[ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ! - ಇ.ಡಿ. ದಾಳಿ ಬೆನ್ನಲ್ಲೇ ಲೋಕಾಯುಕ್ತರಿಂದ ಶಾಕ್]]></title>
            <link>https://kannada.asianetnews.com/state/belagavi-ed-raid-on-satish-jarkiholi-s-brother-in-law-followed-by-lokayukta-document-check-rav/articleshow-48z79zn</link>
            <guid isPermaLink="true">https://kannada.asianetnews.com/state/belagavi-ed-raid-on-satish-jarkiholi-s-brother-in-law-followed-by-lokayukta-document-check-rav/articleshow-48z79zn</guid>
            <pubDate>Sat, 04 Jul 2026 07:19:52 +0530</pubDate>
            <description><![CDATA[&lt;p&gt;ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್&zwnj; ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwncw1dg0ws9tw3nm8gywe4v,imgname-----------------------2026-07-04t071549.995-1783129572784.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಿರೀಶ್ ಮಾದೇನಹಳ್ಳಿ&lt;/strong&gt;&lt;/p&gt;&lt;p&gt;&lt;strong&gt;&amp;nbsp;ಬೆಂಗಳೂರು (ಜು.4): &lt;/strong&gt;ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್&zwnj; ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.&lt;/p&gt;&lt;h2&gt;5 ವರ್ಷಗಳ ಅವಧಿಯ ಬಾರ್ ಲೈಸೆನ್ಸ್ ಮಾಯಾಜಾಲ&lt;/h2&gt;&lt;p&gt;ಈ ಪರವಾನಗಿ ಮಾಹಿತಿ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿನ ಐದು ವರ್ಷಗಳ ಅವಧಿಯ (2020-25ರವರೆಗೆ) &lsquo;ಲೈಸೆನ್ಸ್&zwnj; ಮಾಯಾಜಾಲ&rsquo;ದ ಶೋಧನೆಗೆ ಲೋಕಾಯುಕ್ತ ಪೊಲೀಸರು ಇಳಿದಿದ್ದು, ಇದರ ಭಾಗವಾಗಿಯೇ ಮೂರು ದಿನಗಳ ಹಿಂದೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಅಬಕಾರಿ ಇಲಾಖೆಯ ಉಪ ಆಯುಕ್ತರುಗಳ (ಡಿಸಿ) ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.&lt;/p&gt;&lt;p&gt;ಮದ್ಯದಂಗಡಿಗಳ ಪರವಾನಗಿ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದ್ದು, ಇದಕ್ಕಾಗಿ ಆನ್&zwnj;ಲೈನ್&zwnj; ವ್ಯವಸ್ಥೆ ರೂಪಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರಿಗೆ ಅಬಕಾರಿ ಇಲಾಖೆ ಸ್ಪಷ್ಟಪಡಿಸಿದೆ. ಆದರೆ ಚಾಲಾಕಿ ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದಂತೆ ಅಬಕಾರಿ ಕೋಟೆಯಲ್ಲಿ &lsquo;ಲೈಸೆನ್ಸ್&zwnj; ಮಾಯಾಜಾಲ&rsquo; ಕೆಲಸ ಮಾಡುತ್ತಿದೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಆಪ್ತರಿಗೆ ಪರವಾನಗಿ ವಿತರಣೆ:&lt;/strong&gt;&lt;/p&gt;&lt;p&gt;ಜೂ.24ರಂದು ಬೆಳಗಾವಿ ವಲಯದ ಅಬಕಾರಿ ಹೆಚ್ಚುವರಿ ಆಯುಕ್ತ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಭಾವ ವೈ.ಮಂಜುನಾಥ್ ಮತ್ತು ಅವರ ಆಪ್ತರ ಮನೆ ಸೇರಿ ರಾಜ್ಯದ 14 ಕಡೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿತ್ತು. ಈ ವೇಳೆ 13.3 ಕೋಟಿ ರು. ನಗದನ್ನು ಇ.ಡಿ. ಜಪ್ತಿ ಮಾಡಿತ್ತು. ಮಂಜುನಾಥ್ ಸಾಮ್ರಾಜ್ಯಕ್ಕೆ ಇ.ಡಿ. ಲಗ್ಗೆ ಹಾಕಿದ ಬಳಿಕ ಎಚ್ಚೆತ್ತ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯಲ್ಲಿ ಪರವಾನಗಿ ಜಾಲ ಶೋಧನೆಗಿಳಿದರು. ಆಗ ತಮ್ಮ ಸೋದರ ಸಂಬಂಧಿಗಳು, ಕುಟುಂಬ ಸದಸ್ಯರು, ನಿಷ್ಠರು ಹಾಗೂ ಹಿಂಬಾಲಕರ ಹೆಸರಿನಲ್ಲಿ 30ಕ್ಕೂ ಹೆಚ್ಚಿನ ಜನರಿಗೆ ಪರವಾನಗಿಗಳನ್ನು ಮಂಜುನಾಥ್ ಮಂಜೂರು ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೂಡ ಪೊಲೀಸರು ಸಂಗ್ರಹಿಸಿದ್ದಾರೆ ಎಂದು ಉನ್ನತ ಮೂಲಗಳು &lsquo;ಕನ್ನಡಪ್ರಭ&rsquo;ಕ್ಕೆ ಮಾಹಿತಿ ನೀಡಿವೆ.&lt;/p&gt;&lt;h3&gt;ಲಾಭ ಪಡೆದವರಿಗೆ ಲೋಕಾ ತನಿಖೆ ಬಿಸಿ:&lt;/h3&gt;&lt;p&gt;ಮಂಜುನಾಥ್ ಅವರ ಪರವಾನಗಿ ಹಂಚಿಕೆ ವಿಷಯ ಪತ್ತೆಯಾದ ಬೆನ್ನಲ್ಲೇ ಉಳಿದ ಅಬಕಾರಿ ಇಲಾಖೆ ಉಪ ಆಯುಕ್ತರ ಹಿಂದೆ ಸಹ &lsquo;ಲೈಸೆನ್ಸ್ ಜಾಲ&rsquo; ವಿರುವ ಬಗ್ಗೆ ಲೋಕಾಯುಕ್ತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಗುಮಾನಿ ಮೇರೆಗೆ ದಿಢೀರ್&zwnj; ಬೆಂಗಳೂರು ನಗರದ 8 ಹಾಗೂ ಗ್ರಾಮಾಂತರ ಸೇರಿ ಒಟ್ಟು 9 ಅಬಕಾರಿ ಉಪ ಆಯುಕ್ತರುಗಳ ಕಚೇರಿ ಮೇಲೆ ದಾಳಿ ನಡೆಸಿ ಕಡತಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ವಿವರಿಸಿವೆ.&lt;/p&gt;&lt;p&gt;ಇನ್ನು ಕೆಲ ದಿನಗಳ ಹಿಂದೆ ಬೆಂಗಳೂರು ನಗರದಲ್ಲಿ ಬಾರ್&zwnj;ಗೆ ಪರವಾನಗಿ ನೀಡಲು ಲಂಚ ಸ್ವೀಕರಿಸುವ ವೇಳೆ ಬೆಂಗಳೂರು ನಗರದ ಅಬಕಾರಿ ಇಲಾಖೆ ಡಿಸಿ (ಉಪ ಆಯುಕ್ತ) ಜಗದೀಶ್ ನಾಯಕ್ ಮತ್ತು ಇತರ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಿಎಲ್-7 ಮತ್ತು ಮೈಕ್ರೋ ಬ್ರೂವರಿ ಲೈಸೆನ್ಸ್ ನೀಡಲು ಒಟ್ಟು 80 ಲಕ್ಷ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂಬ ಆರೋಪ ಬಂದಿತ್ತು.&lt;/p&gt;&lt;p&gt;ಈಗ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್&zwnj; 11 ರಡಿ ಮಂಜುನಾಥ್ ಸೇರಿ ಅಬಕಾರಿ ಅಧಿಕಾರಿಗಳಿಂದ ಲಾಭ ಪಡೆದವರನ್ನು ಲೋಕಾಯುಕ್ತ ಪೊಲೀಸರು ತನಿಖೆಗೊಳಪಡಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಪ್ರತ್ಯೇಕ ಎಫ್&zwnj;ಐಆರ್ ಕೂಡ ದಾಖಲಿಸಲಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಅರ್ಜಿ ಸಲ್ಲಿಸುವ ಮುನ್ನವೇ ಡೀಲ್&zwnj;&lt;/strong&gt;&lt;/p&gt;&lt;p&gt;ಮದ್ಯದಂಗಡಿಗೆ ಪರವಾನಗಿ ವಿತರಣೆಗೆ ಆನ್&zwnj;ಲೈನ್&zwnj; ವ್ಯವಸ್ಥೆಯನ್ನು ಅಬಕಾರಿ ಇಲಾಖೆ ಜಾರಿಗೊಳಿಸಿದೆ. ಆದರೆ ಪ್ರಾಥಮಿಕ ಹಂತದಿಂದಲೇ ಕೆಲವರ ಕೈಚಳಕವಿರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಗೋಚರ ಕೈಗಳ ಮಧ್ಯೆ &lsquo;ವ್ಯವಹಾರ&rsquo; ನಡೆಯುತ್ತದೆ. ಇಲ್ಲಿ ಡೀಲ್&zwnj; ಕುದುರದೆ ಹೋದರೆ ಅರ್ಜಿಯೇ ವಜಾಗೊಳ್ಳುತ್ತದೆ. ಹೀಗಾಗಿ ಬಾರ್&zwnj;ಗಳಿಗೆ ಅರ್ಜಿ ಸಲ್ಲಿಸುವವರ ಮೇಲೆ ಗುಮಾನಿ ಬಂದಿದೆ. ಹೆಚ್ಚುವರಿ ಆಯುಕ್ತ ಮಂಜುನಾಥ್ ಅವರ ಅಧಿಕಾರಾವಧಿಯಲ್ಲಿ ಮಂಜೂರಾಗಿರುವ ಪರವಾನಗಿಗಳನ್ನು ಪರಿಶೀಲಿಸಿದಾಗ ಅಕ್ರಮ ಗೊತ್ತಾಯಿತು ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಉಪ ಆಯುಕ್ತರಿಗೆ ಲೋಕಾ ಬುಲಾವ್:&lt;/strong&gt;&lt;/p&gt;&lt;p&gt;ಪ್ರತಿ ಉಪ ಆಯುಕ್ತರ ಅವಧಿಯಲ್ಲಿ ವಿತರಣೆಯಾಗಿರುವ ಪರವಾನಗಿಗಳ ವಿವರ ಸಲ್ಲಿಸುವಂತೆ ಅಬಕಾರಿ ಇಲಾಖೆಗೆ ಲೋಕಾಯುಕ್ತ ಪೊಲೀಸರು ಸೂಚಿಸಿದ್ದಾರೆ. ಈಗ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಉಪ ಆಯುಕ್ತರ ಅವಧಿಯಲ್ಲಿ ವಿತರಿಸಿರುವ ಪರವಾನಗಿಗಳ ಬಗ್ಗೆ ಪೊಲೀಸರು ಜಾಲಾಡಿದ್ದಾರೆ. ಅಲ್ಲದೆ, ಡಿಸಿಗಳಿಗೆ ಸೂಕ್ತ ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;&lt;strong&gt;ಐದು ವರ್ಷಕ್ಕೊಮ್ಮೆ ನವೀಕರಣ:&lt;/strong&gt;&lt;/p&gt;&lt;p&gt;ಐದು ವರ್ಷಕ್ಕೊಮ್ಮೆ ಪರವಾನಗಿ ನವೀಕರಣ ನಿಯಮವನ್ನು ಅಬಕಾರಿ ಇಲಾಖೆ ಜಾರಿಗೊಳಿಸಿದೆ. ಈ ನವೀಕರಣದಲ್ಲೂ ಕಾಂಚಾಣ ಸದ್ದು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪರವಾನಗಿ ನವೀಕರಣ ವೇಳೆ ದಾಳಿ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/belagavi-ed-raid-on-satish-jarkiholi-s-brother-in-law-followed-by-lokayukta-document-check-rav/articleshow-48z79zn"/>
        </item>
        <item>
            <title><![CDATA[Belagavi: ಜುಲೈ 22ರಿಂದ 28ರವರೆಗೆ ಹಲವು ರೈಲುಗಳು ಭಾಗಶಃ ರದ್ದು, ಸಂಚಾರದಲ್ಲಿ ಬದಲಾವಣೆ]]></title>
            <link>https://kannada.asianetnews.com/karnataka-districts/belagavi-indian-railways-several-trains-partially-cancelled-traffic-changes-from-july-22-to-28-mrq/articleshow-4aorisl</link>
            <guid isPermaLink="true">https://kannada.asianetnews.com/karnataka-districts/belagavi-indian-railways-several-trains-partially-cancelled-traffic-changes-from-july-22-to-28-mrq/articleshow-4aorisl</guid>
            <pubDate>Thu, 16 Jul 2026 09:29:47 +0530</pubDate>
            <description><![CDATA[ಲೊಂಡಾ ರೈಲು ನಿಲ್ದಾಣದಲ್ಲಿ ಇಂಜಿನಿಯರಿಂಗ್ ಕಾಮಗಾರಿಯಿಂದಾಗಿ ಜು.22ರಿಂದ 28ರವರೆಗೆ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮಿರಜ್-ಲೊಂಡಾ ಮತ್ತು ಮಿರಜ್-ಕ್ಯಾಸಲ್ ರಾಕ್ ಮಾರ್ಗದ ನಾಲ್ಕು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಕೆಲವು ರೈಲುಗಳು ವಿಳಂಬವಾಗಿ ಸಂಚರಿಸಲಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxmh7seymfkh1fybe7tkdq2m,imgname-indian-railways-belagavi-1784174339550.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಲೊಂಡಾ ರೈಲು ನಿಲ್ದಾಣದ ಯಾರ್ಡ್&zwnj;ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜು.22ರಿಂದ 28ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಎರಡು ರೈಲುಗಳ ಸಂಚಾರವನ್ನು ವಿಳಂಬಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;p&gt;ಜು.24ರಿಂದ 27ರವರೆಗೆ ರೈಲು ಸಂಖ್ಯೆ 56931 ಮಿರಜ್ ಲೊಂಡಾ ಡೈಲಿ ಪ್ಯಾಸೆಂಜರ್ ರೈಲು ಬೆಳಗಾವಿ ಮತ್ತು ಲೊಂಡಾ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಲೊಂಡಾಕ್ಕೆ ತೆರಳದೆ ಬೆಳಗಾವಿಯಲ್ಲಿಯೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ಜು.25ರಿಂದ 28ರವರೆಗೆ ರೈಲು ಸಂಖ್ಯೆ 56932 ಲೊಂಡಾ ಮಿರಜ್ ಡೈಲಿ ಪ್ಯಾಸೆಂಜರ್ ರೈಲು ಲೊಂಡಾ ಮತ್ತು ಬೆಳಗಾವಿ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಲೊಂಡಾ ಬದಲಿಗೆ ಬೆಳಗಾವಿಯಿಂದಲೇ ತನ್ನ ನಿಗದಿತ ವೇಳೆಗೆ ಪ್ರಯಾಣ ಆರಂಭಿಸಲಿದೆ.&lt;/p&gt;&lt;h2&gt;&lt;strong&gt;ಮಿರಜ್ ಕ್ಯಾಸಲ್ ರಾಕ್ ಡೈಲಿ ಎಕ್ಸ್ ಪ್ರೆಸ್&lt;/strong&gt;&lt;/h2&gt;&lt;p&gt;ಜು. 25ರಿಂದ 27ರವರೆಗೆ ರೈಲು ಸಂಖ್ಯೆ 17333 ಮಿರಜ್ ಕ್ಯಾಸಲ್ ರಾಕ್ ಡೈಲಿ ಎಕ್ಸ್ ಪ್ರೆಸ್ ರೈಲು ಬೆಳಗಾವಿ ಮತ್ತು ಕ್ಯಾಸಲ್ ರಾಕ್ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಬೆಳಗಾವಿಯಲ್ಲಿಯೇ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ.&lt;/p&gt;&lt;p&gt;ಇದೇ ಅವಧಿಯಲ್ಲಿ ರೈಲು ಸಂಖ್ಯೆ 17334 ಕ್ಯಾಸಲ್ ರಾಕ್ ಮಿರಜ್ ಡೈಲಿ ಎಕ್ಸ್ ಪ್ರೆಸ್ ರೈಲು ಕ್ಯಾಸಲ್ ರಾಕ್ ಮತ್ತು ಬೆಳಗಾವಿ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಬೆಳಗಾವಿಯಿಂದಲೇ ತನ್ನ ನಿಗದಿತ ವೇಳೆಗೆ ಪ್ರಯಾಣ ಆರಂಭಿಸಲಿದೆ.&lt;/p&gt;&lt;h3&gt;&lt;strong&gt;ಲೋಕಮಾನ್ಯ ತಿಲಕ್ ಟರ್ಮಿನಸ್ ಎಸ್ ಎಂ ವಿಟಿ ಬೆಂಗಳೂರು ದ್ವಿಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು&lt;/strong&gt;&lt;/h3&gt;&lt;p&gt;ಜು. 22ರಂದು ಲೋಕಮಾನ್ಯ ತಿಲಕ್ ಟರ್ಮಿನಸ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16554 ಲೋಕಮಾನ್ಯ ತಿಲಕ್ ಟರ್ಮಿನಸ್ ಎಸ್ ಎಂ ವಿಟಿ ಬೆಂಗಳೂರು ದ್ವಿಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆ 40 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ. ಜು. 26 ಮತ್ತು 27ರಂದು ಕೆ ಎಸ್ ಆರ್ ಬೆಂಗಳೂರುದಿಂದ ಹೊರಡುವ ರೈಲು ಸಂಖ್ಯೆ 20653 ಕೆ ಎಸ್ ಆರ್ ಬೆಂಗಳೂರು ಬೆಳಗಾವಿ ಡೈಲಿ ಎಕ್ಸ್ ಪ್ರೆಸ್ ರೈಲು ಕ್ರಮವಾಗಿ 30 ನಿಮಿಷ ಹಾಗೂ 60 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ. ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ರೈಲುಗಳ ವೇಳಾಪಟ್ಟಿಯನ್ನು ಪರಿಶೀಲಿಸಿ ಪ್ರಯಾಣ ಕೈಗೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-indian-railways-several-trains-partially-cancelled-traffic-changes-from-july-22-to-28-mrq/articleshow-4aorisl"/>
        </item>
        <item>
            <title><![CDATA[ಹಾವೇರಿ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಚಿಂತನೆ; ಮಳೆ ಕೊರತೆ]]></title>
            <link>https://kannada.asianetnews.com/karnataka-districts/government-considering-cloud-seeding-in-belagavi-district-after-haveri-rain-deficient-mrq/articleshow-6d901co</link>
            <guid isPermaLink="true">https://kannada.asianetnews.com/karnataka-districts/government-considering-cloud-seeding-in-belagavi-district-after-haveri-rain-deficient-mrq/articleshow-6d901co</guid>
            <pubDate>Sun, 05 Jul 2026 07:58:56 +0530</pubDate>
            <description><![CDATA[&lt;p&gt;ಜಿಲ್ಲೆಯಲ್ಲಿ ಶೇ.29ರಷ್ಟು ಮಳೆ ಕೊರತೆಯಾಗಿದ್ದರೂ, ಇತ್ತೀಚಿನ ಮಳೆಯಿಂದ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಮೋಡ ಬಿತ್ತನೆ ಬಗ್ಗೆ ತೀರ್ಮಾನಿಸಲಾಗುವುದು ಹಾಗೂ ನಗರದ ರಸ್ತೆ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwr1mjegdh5xqgwng2w16phv,imgname-cloud-seeding--1783218457040.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ: &lt;/strong&gt;ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಈವರೆಗೆ ಶೇ.29ರಷ್ಟು ಮಳೆ ಕೊರತೆ ದಾಖಲಾಗಿದ್ದರೂ, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳಿಗೆ ಒಳಹರಿವು ಆರಂಭವಾಗಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಇದೇ ರೀತಿ ಮಳೆ ಮುಂದುವರಿದರೆ ಮಳೆ ಕೊರತೆಯೂ ನೀಗಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.&lt;/p&gt;&lt;h2&gt;&lt;strong&gt;ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಇಲ್ಲ&lt;/strong&gt;&lt;/h2&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ, ನಗರಸಭೆ ಹಾಗೂ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇವಲ ಹತ್ತು ಪ್ರದೇಶಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಇದೀಗ ರಕ್ಕಸಕೊಪ್ಪ ಜಲಾಶಯಕ್ಕೂ ನೀರು ಹರಿದು ಬರುತ್ತಿದ್ದು, ಒಂದು ವಾರ ಮಳೆ ಹೀಗೆ ಸುರಿದರೆ, ಜಲಾಶಯಗಳು ಭರ್ತಿಯಾಗುವ ನಿರೀಕ್ಷೆಯಿದೆ. ಇದರಿಂದ ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ಸರ್ಕಾರ ಮಟ್ಟದಲ್ಲಿ ಚಿಂತನೆ&lt;/strong&gt;&lt;/h3&gt;&lt;p&gt;ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಪ್ರಮಾಣದಲ್ಲಿ ಬಿತ್ತನೆ ನಡೆದಿದ್ದು, ಈಗ ಸುರಿಯುತ್ತಿರುವ ಮಳೆ ರೈತರಿಗೆ ಆಶಾದಾಯಕವಾಗಿದೆ. ರಾಮದುರ್ಗ, ಸವದತ್ತಿ ಸೇರಿದಂತೆ ಕೆಲ ಭಾಗಗಳಲ್ಲಿ ಇನ್ನೂ ಸಮರ್ಪಕ ಮಳೆಯಾಗದಿದ್ದರೂ, ಅಲ್ಲಿಯೂ ಮುಂದಿನ ಎಂಟು ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಒಂದು ವೇಳೆ ಮಳೆ ಕೈಕೊಟ್ಟರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬೆಳೆ ಹಾನಿ ಸಮೀಕ್ಷೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ, ಸದ್ಯಕ್ಕೆ ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದ ಅವರು, ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಆರಂಭಿಸಿದಂತೆ ಅಗತ್ಯ ಎನಿಸಿದರೆ, ಇಲ್ಲಿಯೂ ಮೋಡ ಬಿತ್ತನೆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.&lt;/p&gt;&lt;p&gt;ನಗರದಲ್ಲಿ ನೀರಿನ ಪೈಪ್&zwnj;ಲೈನ್ ಅಳವಡಿಕೆಗಾಗಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ, ಇದು ಎಲ್ ಆ್ಯಂಡ್ ಟಿ ಕಂಪನಿಯಿಂದ ಉಂಟಾಗಿರುವ ಸಮಸ್ಯೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಸೇರಿದಂತೆ ಈಗಾಗಲೇ ಹಲವು ಬಾರಿ ಸಭೆ ನಡೆಸಿದ್ದೇವೆ. ಎಲ್ ಆ್ಯಂಡ್&zwnj; ಟಿ ಕಂಪನಿಯವರು ನಾಲ್ಕೈದು ವರ್ಷಗಳಿಂದ ರಸ್ತೆ ಅಗೆದು ಜನರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಲು ಸೂಚಿಸುತ್ತೇನೆ. ಮಳೆಗಾಲದಲ್ಲಿ ಇಂತಹ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಲಾಗುವುದು. ಮಳೆಯಿಂದ ಜಿಲ್ಲೆಯ ವಿವಿಧೆಡೆ ಹದಗೆಟ್ಟಿರುವ ರಸ್ತೆಗಳನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗುವುದು. ಮಳೆಗಾಲ ಮುಗಿದ ಬಳಿಕ ಹಂತ ಹಂತವಾಗಿ ಹೊಸ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೆಳಗಾವಿ ನಗರದಲ್ಲಿ ಫುಟ್&zwnj;ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ತೆರವಿಗೆ ಮುನ್ನ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಅಗತ್ಯ ಸಮಯಾವಕಾಶ ನೀಡುವಂತೆ ಅಕಾರಿಗಳಿಗೆ ಸೂಚಿಸಲಾಗುವುದು ಎಂದರು.&lt;/p&gt;&lt;p&gt;ಯಮಕನಮರಡಿಯ ಹುಣಸಿಕೊಳ್ಳಮಠದಲ್ಲಿ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರುತಿ ಅಷ್ಟಗಿ ಅವರು ನೀಡಿರುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದೊಂದು ಹೊಸದಾಗಿ ಶುರುವಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಎಲ್ಲದಕ್ಕೂ ನಮ್ಮನ್ನೇ ಹೊಣೆ ಮಾಡುತ್ತಾರೆ. ಮೂಲೆಯಲ್ಲಿ ಎಮ್ಮೆ, ನಾಯಿ ಸತ್ತರೂ ನಮ್ಮನ್ನೇ ದೂರುತ್ತಾರೆ. 2028ರವರೆಗೆ ಇಂತಹ ಆರೋಪಗಳು ಬರುತ್ತಲೇ ಇರುತ್ತವೆ. ಹಲ್ಲೆ ಕುರಿತು ವಿಚಾರವಾಗಿ ಶ್ರೀಸಿದ್ಧಬಸವ ಸ್ವಾಮೀಜಿಯವರ ಹೇಳಿಕೆ ಗಮನಿಸಿದ್ದೇನೆ. ವೈಯಕ್ತಿಕ ಕಾರಣದಿಂದಾಗಿ ಘಟನೆ ನಡೆದಿದೆ. ಕೆಲವರಿಗೆ ಸುಳ್ಳು ಆರೋಪ ಮಾಡುವುದೇ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.&lt;/p&gt;&lt;p&gt;ಇನ್ನು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವ ಸಂಪುಟದಲ್ಲಿ ಇನ್ನೂ ಸುಮಾರು ೨೦ ಸ್ಥಾನಗಳು ಖಾಲಿ ಇದ್ದು, ಆದಷ್ಟು ಬೇಗ ವಿಸ್ತರಣೆ ನಡೆಯುವ ನಿರೀಕ್ಷೆಯಿದೆ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/government-considering-cloud-seeding-in-belagavi-district-after-haveri-rain-deficient-mrq/articleshow-6d901co"/>
        </item>
        <item>
            <title><![CDATA[ಬೆಳಗಾವಿಯಲ್ಲಿ ಭಾರೀ ಅನಾಹುತ; ಹುಣಸೆ ಮರ ದುರಂತದಿಂದ 4 ಕುಟುಂಬ ಪಾರಾಗಿದ್ದೇ ಪವಾಡ]]></title>
            <link>https://kannada.asianetnews.com/gallery/belagavi/in-belagavi-due-to-heavy-rains-in-huge-tamarind-tree-collapsed-and-four-families-fortunately-escaped-unharmed-gkn-dl0gz7g</link>
            <guid isPermaLink="true">https://kannada.asianetnews.com/gallery/belagavi/in-belagavi-due-to-heavy-rains-in-huge-tamarind-tree-collapsed-and-four-families-fortunately-escaped-unharmed-gkn-dl0gz7g</guid>
            <pubDate>Sun, 05 Jul 2026 10:11:32 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಖಾಸಬಾಗ ಪ್ರದೇಶದಲ್ಲಿ ಬೃಹತ್ ಹುಣಸೆ ಮರವೊಂದು ನಾಲ್ಕು ಮನೆಗಳ ಮೇಲೆ ಉರುಳಿಬಿದ್ದಿದೆ. ಈ ಘಟನೆಯಲ್ಲಿ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwr8s9cte90sk310ahdg8m61,imgname-belagavi-rain-effect--3--1783225951642.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಖಾಸಬಾಗ ಪ್ರದೇಶದಲ್ಲಿ ಬೃಹತ್ ಹುಣಸೆ ಮರವೊಂದು ನಾಲ್ಕು ಮನೆಗಳ ಮೇಲೆ ಉರುಳಿಬಿದ್ದಿದೆ. ಈ ಘಟನೆಯಲ್ಲಿ ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.&lt;/p&gt;&lt;img&gt;&lt;p&gt;&lt;strong&gt;ಬೆಳಗಾವಿ: &lt;/strong&gt;ಕುಂದಾನಗರಿ ಬೆಳಗಾವಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ನಗರದ ಖಾಸಬಾಗ ಪ್ರದೇಶದಲ್ಲಿ ಬೃಹತ್ ಮರವೊಂದು ಮನೆಗಳ ಮೇಲೆ ಉರುಳಿ ಬಿದ್ದಿದ್ದು, ಭಾರಿ ಹಾನಿ ಅನಾಹುತ ಸಂಭವಿಸಿದೆ.&lt;/p&gt;&lt;img&gt;&lt;p&gt;ಬೆಳಗಾವಿ ನಗರದ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಇಲ್ಲಿನ ಹಳೆಯ ಬೃಹತ್ ಹುಣಸೆ ಮರವೊಂದು ಬೇರು ಸಮೇತ ಕಿತ್ತು ಧರೆಗುರುಳಿದೆ. ಮರವು ನೇರವಾಗಿ ಪಕ್ಕದಲ್ಲಿದ್ದ ನಾಲ್ಕು ಮನೆಗಳ ಮೇಲೆ ಬಿದ್ದಿದ್ದು, ಮನೆಗಳ ಮೇಲ್ಛಾವಣಿ ಹಾಗೂ ಗೋಡೆಗಳು ಕುಸಿದಿವೆ.&lt;/p&gt;&lt;img&gt;&lt;p&gt;ಮರ ಬೀಳುವ ಸಂದರ್ಭದಲ್ಲಿ ಮನೆಯೊಳಗೆ ನಿವಾಸಿಗಳು ಇದ್ದರಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅನಿಲ್ ಮುಟ್ಟೇಕರ್, ಆನಂದ ಭದ್ವಾಂಕರ್, ಏಕನಾಥ ಭದ್ವಾಂಕರ್ ಮತ್ತು ಪ್ರಶಾಂತ ಗೋರ್ಲೆ ಎಂಬುವವರಿಗೆ ಸೇರಿದ ಮನೆಗಳು ಜಖಂಗೊಂಡಿವೆ. ಮರ ಬಿದ್ದ ರಭಸಕ್ಕೆ ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ದೈನಂದಿನ ಬಳಕೆಯ ವಸ್ತುಗಳು ಪುಡಿಯಾಗಿವೆ.&lt;/p&gt;&lt;img&gt;&lt;p&gt;ಮನೆಯನ್ನು ಕಳೆದುಕೊಂಡು ಬೀದಿಗೆ ಬಂದಿರುವ ನಾಲ್ಕು ಕುಟುಂಬಗಳು ಈಗ ದಿಕ್ಕು ತೋಚದಂತಾಗಿವೆ. ಮಳೆಯ ನಡುವೆಯೇ ಆಶ್ರಯ ಕಳೆದುಕೊಂಡಿರುವ ಸಂತ್ರಸ್ತರು, ನಮಗೆ ಉಂಟಾಗಿರುವ ನಷ್ಟಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸಿ ಸೂಕ್ತ ಪರಿಹಾರ ನೀಡಬೇಕು&quot; ಎಂದು ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ.&lt;/p&gt;&lt;img&gt;&lt;p&gt;ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಶಹಾಪುರ ಪೊಲೀಸರು ಧಾವಿಸಿದ್ದಾರೆ. ಮನೆಗಳ ಮೇಲೆ ಬಿದ್ದಿರುವ ಬೃಹತ್ ಮರದ ರೆಂಬೆಗಳನ್ನು ಕತ್ತರಿಸಿ ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಬೆಳಗಾವಿಯಲ್ಲಿ ಮಳೆ ಮುಂದುವರಿದಿದ್ದು, ಹಳೆಯ ಕಟ್ಟಡ ಹಾಗೂ ಮರಗಳ ಪಕ್ಕದಲ್ಲಿರುವ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/gallery/belagavi/in-belagavi-due-to-heavy-rains-in-huge-tamarind-tree-collapsed-and-four-families-fortunately-escaped-unharmed-gkn-dl0gz7g"/>
        </item>
        <item>
            <title><![CDATA[ಇಂದಿನಿಂದ 3 ದಿನ ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ಪ್ರಚಾರಕರ ಸಭೆ, ಯಾರಾರು ಆಗಮಿಸಲಿದ್ದಾರೆ? ಸಭೆಯ ಚರ್ಚೆಗಳೇನು?]]></title>
            <link>https://kannada.asianetnews.com/state/rss-pracharak-meeting-in-belagavi-for-three-days-starting-today-rav/articleshow-e2nycuu</link>
            <guid isPermaLink="true">https://kannada.asianetnews.com/state/rss-pracharak-meeting-in-belagavi-for-three-days-starting-today-rav/articleshow-e2nycuu</guid>
            <pubDate>Fri, 10 Jul 2026 06:42:21 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಸರಸಂಘಚಾಲಕ ಡಾ.ಮೋಹನ್&zwnj; ಭಾಗವತ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಮೂರು ದಿನಗಳ ಸಭೆಯಲ್ಲಿ ನಡೆಯಲಿರುವ ಚರ್ಚೆಗಳೇನು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwwy1h6424ewvjc66pvxn5qs,imgname-----------------------2026-07-07t053029.416-1783382459588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಜು.10): &lt;/strong&gt;ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಸಜ್ಜುಗೊಂಡಿದೆ. ಶುಕ್ರವಾರದಿಂದ ಮೂರು ದಿನ ನಡೆಯಲಿರುವ ಸಭೆಯಲ್ಲಿ ಸಂಘದ ಸರಸಂಘಚಾಲಕ ಡಾ.ಮೋಹನ್&zwnj; ಭಾಗವತ್ ಸೇರಿ ಉನ್ನತ ನಾಯಕತ್ವ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರಚಾರಕರು ಪಾಲ್ಗೊಳ್ಳಲಿದ್ದಾರೆ.&lt;/p&gt;&lt;h2&gt;ಆರ್&zwnj;ಎಸ್&zwnj;ಎಸ್&zwnj; ಸಭೆ ನಡೆಯುವ ಸ್ಥಳ&lt;/h2&gt;&lt;p&gt;ಅನಗೋಳದ ಸಂತ ಮೀರಾ ಶಾಲೆ, ಶಾಸ್ತ್ರಿನಗರದಲ್ಲಿರುವ ಸಂಘದ ಕಚೇರಿ ಹಾಗೂ ಉದ್ಯಮಬಾಗದ ಫೌಂಡ್ರಿ ಕ್ಲಸ್ಟರ್&zwnj;ನಲ್ಲಿ ವಿವಿಧ ಹಂತದ ಸಭೆಗಳು ನಡೆಯಲಿವೆ. ಪ್ರಮುಖ ಚರ್ಚೆಗಳು ಸಂತ ಮೀರಾ ಶಾಲೆಯಲ್ಲೇ ನಡೆಯಲಿದ್ದು, ಸಭಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.&lt;/p&gt;&lt;h3&gt;ಯಾರಾರು ಆಗಮಿಸಲಿದ್ದಾರೆ&lt;/h3&gt;&lt;p&gt;ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಸಹ ಸರಕಾರ್ಯವಾಹರಾದ ಡಾ। ಕೃಷ್ಣಗೋಪಾಲ, ಸಿ.ಆರ್.ಮುಕುಂದ, ಅರುಣಕುಮಾರ, ರಾಮದತ್ತ, ಆಲೋಕ ಕುಮಾರ ಹಾಗೂ ಅತುಲ್ ಲಿಮಯೆ ಸೇರಿದಂತೆ ಸಂಘದ ಹಿರಿಯ ಪದಾಧಿಕಾರಿಗಳು ಈಗಾಗಲೇ ಬೆಳಗಾವಿಗೆ ಆಗಮಿಸಿದ್ದಾರೆ.&lt;/p&gt;&lt;p&gt;ಅಲ್ಲದೆ 11 ಕ್ಷೇತ್ರಗಳು, 46 ಪ್ರಾಂತಗಳ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು, ಸಂಘಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಸುಮಾರು 130ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.&lt;/p&gt;&lt;p&gt;ಗುರುವಾರ ಸಂತ ಮೀರಾ ಶಾಲೆಯಲ್ಲಿ ಸಭೆಯ ಪೂರ್ವಸಿದ್ಧತಾ ಸಭೆಗಳು ನಡೆದವು. ವಸತಿ, ಭದ್ರತೆ ಹಾಗೂ ಸಭೆಯ ಸಂಘಟನಾ ವ್ಯವಸ್ಥೆಗಳ ಕುರಿತು ಅಂತಿಮ ಸಿದ್ಧತೆಗಳನ್ನು ಪೂರ್ಣಗೊಳಿಸಲಾಯಿತು. ಕಳೆದ ಮಾರ್ಚ್&zwnj;ನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಮುಂದುವರಿದ ಭಾಗವಾಗಿ ಈ ಸಭೆ ನಡೆಯುತ್ತಿದೆ. ಸಂಘಟನಾ ವಿಸ್ತರಣೆ, ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳು, ತರಬೇತಿ ವರ್ಗಗಳ ಪರಿಶೀಲನೆ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ.&lt;/p&gt;&lt;p&gt;ರಾಮಮಂದಿರ ಮತ್ತು ಬದರಿನಾಥ ದೇವಸ್ಥಾನಗಳ ಹುಂಡಿ ಸಂಬಂಧಿತ ಬೆಳವಣಿಗೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಕೆಲವು ಮೂಲಗಳಿಂದ ವ್ಯಕ್ತವಾಗಿದ್ದರೂ, ಈ ಕುರಿತು ಸಂಘದಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/rss-pracharak-meeting-in-belagavi-for-three-days-starting-today-rav/articleshow-e2nycuu"/>
        </item>
        <item>
            <title><![CDATA[ಕೃಷ್ಣಾ ನದಿಗೆ ಹರಿದು ಬರುತ್ತಿದೆ  60 ಸಾವಿರ ಕ್ಯೂಸೆಕ್ಸ್ ನೀರು; ಸೇತುವೆಗಳು ಜಾಲವೃತ]]></title>
            <link>https://kannada.asianetnews.com/gallery/karnataka-districts/maharashtra-rain-60-thousand-cusecs-of-water-is-flowing-into-krishna-river-chikkodi-nippani-taluks-bridges-are-blocked-e5u7gla</link>
            <guid isPermaLink="true">https://kannada.asianetnews.com/gallery/karnataka-districts/maharashtra-rain-60-thousand-cusecs-of-water-is-flowing-into-krishna-river-chikkodi-nippani-taluks-bridges-are-blocked-e5u7gla</guid>
            <pubDate>Sun, 05 Jul 2026 14:16:53 +0530</pubDate>
            <description><![CDATA[&lt;p&gt;ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿನ ಭಾರಿ ಮಳೆಯಿಂದಾಗಿ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕುಗಳ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಜಿಲ್ಲಾಡಳಿತವು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwrq0qkypv0jtbkj4s2yxgrx,imgname-krishna-river--2--1783240875646.jpg" type="image/jpeg" height="390" width="690"/>
            <content:encoded><![CDATA[&lt;p&gt;ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿನ ಭಾರಿ ಮಳೆಯಿಂದಾಗಿ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕುಗಳ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಜಿಲ್ಲಾಡಳಿತವು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.&lt;/p&gt;&lt;img&gt;&lt;p&gt;ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದರಲ್ಲಿ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್&zwnj;ನಿಂದಲೇ ಸುಮಾರು 40 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ದೂದಗಂಗಾ ಮತ್ತು ವೇದಗಂಗಾ ಈ ಎರಡೂ ನದಿಗಳು ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿಗಳ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸಲಾಗುತ್ತಿದೆ.&lt;/p&gt;&lt;img&gt;&lt;p&gt;ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಕಲ್ಲೋಳ-ಯಡ್ಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ನಿಪ್ಪಾಣಿ ತಾಲೂಕಿನ ಒಟ್ಟು ಮೂರು ಸಂಪರ್ಕ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ.&lt;/p&gt;&lt;img&gt;&lt;p&gt;ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಮತ್ತು ಭೋಜವಾಡಿ-ಕುಣ್ಣುರ ಸಂಪರ್ಕಿಸುವ ಸೇತುವೆಗಳು ಜಲಾವೃತಗೊಂಡಿವೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ ಸೇತುವೆಯೂ ಹಾನಿಗೊಳಗಾಗಿದೆ.ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆಯೂ ಸಹ ನೀರಿನಲ್ಲಿ ಮುಳುಗಡೆಯಾಗಿದೆ.&lt;/p&gt;&lt;img&gt;&lt;p&gt;ಪ್ರಮುಖ ಸೂಚನೆ: ಕೃಷ್ಣಾ, ವೇದಗಂಗಾ ಮತ್ತು ದೂದಗಂಗಾ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಯಾರೂ ನದಿಗೆ ಇಳಿಯಬಾರದು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತವು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/maharashtra-rain-60-thousand-cusecs-of-water-is-flowing-into-krishna-river-chikkodi-nippani-taluks-bridges-are-blocked-e5u7gla"/>
        </item>
        <item>
            <title><![CDATA[ಅಣಬೆ ಪ್ರಿಯರೇ ಎಚ್ಚರ! ಅಣಬೆ ತಿಂದ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ; ಅಸಲಿಗೆ ಆಗಿದ್ದೇನು?]]></title>
            <link>https://kannada.asianetnews.com/belagavi/mushroom-lovers-beware-9-people-from-the-same-family-fell-ill-after-eating-mushrooms-gkn/articleshow-emv0k41</link>
            <guid isPermaLink="true">https://kannada.asianetnews.com/belagavi/mushroom-lovers-beware-9-people-from-the-same-family-fell-ill-after-eating-mushrooms-gkn/articleshow-emv0k41</guid>
            <pubDate>Fri, 10 Jul 2026 13:04:05 +0530</pubDate>
            <description><![CDATA[&lt;p&gt;ಹೊಲದಲ್ಲಿ ರಾಶಿ ರಾಶಿ ಅಣಬೆಗಳು ಕಂಡ ಮಾಲೀಕರು ಖುಷಿಯಿಂದ ಅವುಗಳನ್ನ ಮನೆಗೆ ತಂದು ಸಂಬಾರ್ ಮಾಡಿದ್ದರು. ಅದನ್ನು ಸೇವಿಸಿದ್ದ 9 ಮಂದಿ ಸಾವು, ಬದುಕಿನ ಮಧ್ಯೆ ಹೋರಾಟ ನಡೆಸ್ತಿದ್ದಾರೆ. ಅಷ್ಟಕ್ಕೂ ಅಸಲಿಗೆ ಆಗಿದ್ದೇನು? ಇಲ್ಲಿದೆ ಮಾಹಿತಿ..&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx5f3yt7s0evgvqz0gjpe8wg,imgname-belagavi-mushroom--1--1783668800327.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಹೇಳಿ ಕೇಳಿ ಇದು ಮಳೆಗಾಲ. ಮಳೆ ಆರಂಭವಾಗುತ್ತಿದ್ದಂತೆಯೇ ಹಳ್ಳಿಗಳಲ್ಲಿ ಹೊಲ, ಗದ್ದೆ ಹಾಗೂ ಬಯಲು ಪ್ರದೇಶಗಳಲ್ಲಿ ಅಣಬೆಗಳು (Mushrooms) ಏಳುವುದು ಸಾಮಾನ್ಯ. ಈ ಅಪರೂಪದ ಅಣಬೆಗಳನ್ನು ಕಂಡ ತಕ್ಷಣ ಜನರು ಅದನ್ನು ಮನೆಗೆ ತಂದು ಅಡುಗೆ ಮಾಡಿ ಸವಿಯುತ್ತಾರೆ. ಆದರೆ, ಹೀಗೆ ಅಣಬೆ ತಿನ್ನುವ ಮೊದಲು ಒಮ್ಮೆ ಎಚ್ಚರಿಕೆ ವಹಿಸುವುದು ಉತ್ತಮ. ಇಲ್ಲದಿದ್ದರೆ ನಿಮ್ಮ ಜೀವಕ್ಕೇ ಅಪಾಯ ಬಂದೊದಗಬಹುದು!&lt;/p&gt;&lt;p&gt;ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಇಂತಹದ್ದೇ ಒಂದು ಆತಂಕಕಾರಿ ಘಟನೆ ನಡೆದಿದ್ದು, ವಿಷಪೂರಿತ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.&lt;/p&gt;&lt;h2&gt;&lt;strong&gt;ನಡೆದಿದ್ದೇನು?&lt;/strong&gt;&lt;/h2&gt;&lt;p&gt;ಉಮರಾಣಿ ಗ್ರಾಮದ ಜಿದ್ದಿಮನಿ ಹಾಗೂ ಕೋಳಿ ಕುಟುಂಬದ ಸದಸ್ಯರು ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ, ಅಲ್ಲಿ ಬೆಳೆದಿದ್ದ ಅಣಬೆಗಳನ್ನು ಕಿತ್ತು ತಂದಿದ್ದರು. ಅಣಬೆ ಕಂಡ ಖುಷಿಯಲ್ಲಿ ಮನೆಯಲ್ಲಿ ಅಡುಗೆ ಮಾಡಿ ಎಲ್ಲರೂ ಸವಿದಿದ್ದರು. ಆದರೆ, ಊಟ ಮಾಡಿದ ಕೆಲವೇ ಹೊತ್ತಿನಲ್ಲಿ ಎಲ್ಲರಿಗೂ ವಾಂತಿ ಹಾಗೂ ಭೇದಿ ಕಾಣಿಸಿಕೊಂಡು ಮನೆಯಲ್ಲೇ ನರಳಾಡತೊಡಗಿದ್ದಾರೆ.&lt;/p&gt;&lt;h3&gt;&lt;strong&gt;ಕಾರಣವೇನು?&lt;/strong&gt;&lt;/h3&gt;&lt;p&gt;ವರದಿಗಳ ಪ್ರಕಾರ, ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರು ಕ್ರಿಮಿನಾಶಕ ಔಷಧಿಯನ್ನು ಸಿಡಿಸಿದ್ದರು. ಔಷಧಿ ಹೊಡೆದ ವಿಷಯ ತಿಳಿಯದ ಕುಟುಂಬದ ಸದಸ್ಯರು ಆ ಅಣಬೆಯನ್ನು ಕಿತ್ತು ತಂದು ಸೇವಿಸಿದ್ದಾರೆ. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿದ ಪರಿಣಾಮ ಅದು ವಿಷವಾಗಿ ಮಾರ್ಪಟ್ಟು ಇಡೀ ಕುಟುಂಬ ಅಸ್ವಸ್ಥಗೊಳ್ಳಲು ಕಾರಣವಾಗಿದೆ.&lt;/p&gt;&lt;h3&gt;&lt;strong&gt;ಆಸ್ಪತ್ರೆಗೆ ದಾಖಲು&lt;/strong&gt;&lt;/h3&gt;&lt;p&gt;ತೀವ್ರ ಅಸ್ವಸ್ಥಗೊಂಡ 9 ಜನರನ್ನು ತಕ್ಷಣವೇ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಲ್ಲಿ ಒಬ್ಬರು ಗರ್ಭಿಣಿ ಮಹಿಳೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.&lt;/p&gt;&lt;h3&gt;&lt;strong&gt;ಇರಲಿ ಎಚ್ಚರ&lt;/strong&gt;&lt;/h3&gt;&lt;ul&gt; &lt;li&gt;ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಲಿ&lt;/li&gt; &lt;li&gt;ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ&lt;/li&gt; &lt;li&gt;ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಅವುಗಳನ್ನು ಗುರುತಿಸುವುದು ಕಷ್ಟ&lt;/li&gt; &lt;li&gt;ಅಣಬೆ ತರುವ ಮುನ್ನ ಅವು ಬೆಳೆದ ಜಾಗ ಮತ್ತು ಅವುಗಳ ವಿಧದ ಬಗ್ಗೆ ಖಚಿತ ಮಾಹಿತಿ ಇರಲಿ&lt;/li&gt; &lt;li&gt;ಅಪರಿಚಿತ ಅಣಬೆಗಳನ್ನು ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳಬೇಡಿ&lt;/li&gt;&lt;/ul&gt;]]></content:encoded>
            <category>belagavi</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/belagavi/mushroom-lovers-beware-9-people-from-the-same-family-fell-ill-after-eating-mushrooms-gkn/articleshow-emv0k41"/>
        </item>
        <item>
            <title><![CDATA[ವರುಣ ಆರ್ಭಟಕ್ಕೆ ಒಂದೇ ತಾಲೂಕಿನ 7 ಸೇತುವೆಗಳು ಜಲಾವೃತ; ಪ್ರವಾಹ ಭೀತಿಯಲ್ಲಿರೋ ಜನರು]]></title>
            <link>https://kannada.asianetnews.com/karnataka-districts/belagavi-heavy-rains-lashing-the-western-ghats-of-maharashtra-seven-lower-level-bridges-in-chikkodi-taluk-flooded-mrq/articleshow-g6yfvh4</link>
            <guid isPermaLink="true">https://kannada.asianetnews.com/karnataka-districts/belagavi-heavy-rains-lashing-the-western-ghats-of-maharashtra-seven-lower-level-bridges-in-chikkodi-taluk-flooded-mrq/articleshow-g6yfvh4</guid>
            <pubDate>Tue, 07 Jul 2026 07:45:04 +0530</pubDate>
            <description><![CDATA[ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಏಳು ಕೆಳಹಂತದ ಸೇತುವೆಗಳು ಜಲಾವೃತವಾಗಿದ್ದು, ಮರಗಳು ಉರುಳಿಬಿದ್ದ ಘಟನೆಗಳು ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಲಪ್ರಭಾ ನದಿಗೆ ಮತ್ತೆ ಜೀವಕಳೆ ಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwx5b89fqws6p2gmsgvpfqra,imgname-belagavi-flood-rain--1783390118191.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ: ಆರಂಭದಲ್ಲಿ ಕ್ಷೀಣಗೊಂಡಿದ್ದ ಮುಂಗಾರು ಈಗ ತನ್ನ ಚುರುಕು ಪಡೆದು ಆರ್ಭಟಿಸುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿಸಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ಹಾಗೂ ಅದರ ಉಪನದಿಗಳ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 78 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಜಿಲ್ಲೆಯ ಹಲವು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.&lt;/p&gt;&lt;p&gt;ದೂಧಗಂಗಾ, ವೇದಗಂಗಾ ಸೇರಿದಂತೆ ಕೃಷ್ಣಾ ಉಪನದಿಗಳು, ಮಲಪ್ರಭಾ ಮೈದುಂಬಿ ಹರಿಯುತ್ತಿವೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನ ಕರದಗಾ-ಭೋಜ, ಭಾರವಾಡ-ಕುಣ್ಣೂರ, ಅಕ್ಕೋಳ-ಸಿದ್ನಾಳ, ಯಡೂರು-ಕಲ್ಲೋಳ, ಜತ್ರಾಟ- ಭೀವಶಿ, ಭೋಜವಾಡಿ- ಗಜಭರವಾಡಿ, ಮಲಿಕವಾಡ- ದತ್ತವಾಡ ಹಾಗೂ ಮಾಂಜರಿ-ಭಾವನಸೌಂದತ್ತಿ ಸೇರಿದಂತೆ ಏಳಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.&lt;/p&gt;&lt;p&gt;ಸದ್ಯ ನದಿಗಳ ನೀರಿನ ಮಟ್ಟ ಏರಿಕೆಯಲ್ಲಿದ್ದರೂ, ನದಿ ತೀರದ ಗ್ರಾಮಗಳಲ್ಲಿ ಆತಂಕದ ಪರಿಸ್ಥಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿದೆ.&lt;/p&gt;&lt;p&gt;ಚಿಕ್ಕೋಡಿ ತಾಲೂಕಿನ ಮಲಿಕವಾಡ ಬಳಿ ದೂಧಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೂ ಕೆಲವರು ನಿರ್ಲಕ್ಷ್ಯ ಪ್ರದರ್ಶಿಸುತ್ತಿದ್ದಾರೆ. ನಡುಮಟ್ಟದವರೆಗೆ ನೀರಿನಲ್ಲಿ ಇಳಿದು ವೃದ್ಧನೊಬ್ಬ ಮೀನು ಹಿಡಿಯುತ್ತಿರುವ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದರೂ ಅಪಾಯವನ್ನು ಲೆಕ್ಕಿಸದಿರುವುದು ಕಳವಳಕ್ಕೆ ಕಾರಣವಾಗಿದೆ.&lt;/p&gt;&lt;p&gt;ಇದರ ನಡುವೆ ಖಾನಾಪುರದಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್&zwnj; ವ್ಯತ್ಯಯ ಉಂಟಾಗಿದೆ. ಜತೆಗೆ ತಾಲೂಕಿನ ಮಲಪ್ರಭಾ, ಪಾಂಡರಿ ಮತ್ತು ಮಲಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣವೂ ಹೆಚ್ಚಳವಾಗುತ್ತಿದೆ.&lt;/p&gt;&lt;h2&gt;&lt;strong&gt;ಜಾಂಬೋಟಿ ಬಳಿ ಮರ ಉರುಳಿ ಹೆದ್ದಾರಿ ಬಂದ್&lt;/strong&gt;&lt;/h2&gt;&lt;p&gt;ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ರಾಜ್ಯ ಹೆದ್ದಾರಿ ಮೇಲೆಯೇ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಬೆಳಗಾವಿ-ಗೋವಾ ರಸ್ತೆ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮರ ತೆರವು ಕಾರ್ಯಾಚರಣೆ ನಡೆಸಿದರು.&lt;/p&gt;&lt;h3&gt;&lt;strong&gt;ಕಾರಿನ ಮೇಲೆ ಬಿದ್ದ ಮರ&lt;/strong&gt;&lt;/h3&gt;&lt;p&gt;ನಗರದ ಭಾಗ್ಯನಗರ 3ನೇ ಕ್ರಾಸ್&zwnj;ನಲ್ಲಿ ರಸ್ತೆ ಬದಿಯ ಬೃಹತ್ ಮರ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ನಿರಂತರ ಮಳೆಯಿಂದ ಮರದ ಬೇರುಗಳು ಸಡಿಲಗೊಂಡಿದ್ದರಿಂದ ಈ ಘಟನೆ ಸಂಭವಿಸಿದೆ. ಘಟನೆಯ ವೇಳೆ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.&lt;/p&gt;&lt;p&gt;ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮದಲ್ಲಿ ನಿರಂತರ ಮಳೆಯಿಂದ ದನದ ಕೊಟ್ಟಿಗೆ ಕುಸಿದು ಬಿದ್ದ ಪರಿಣಾಮ ಗರ್ಭಿಣಿ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಕೊಟ್ಟಿಗೆ ಲಕ್ಷ್ಮಣ ಕಂಠಿಬಾಳಿ ಅವರಿಗೆ ಸೇರಿದ್ದು, ಘಟನೆಯಿಂದ ಅವರಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.&lt;/p&gt;&lt;h3&gt;&lt;strong&gt;ಮಲಪ್ರಭೆಗೆ ಮತ್ತೆ ಜೀವಕಳೆ&lt;/strong&gt;&lt;/h3&gt;&lt;p&gt;ಮುಂಗಾರು ಆರಂಭದಲ್ಲಿ ಬತ್ತಿಹೋಗಿದ್ದ ಮಲಪ್ರಭಾ ನದಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮತ್ತೆ ಮೈದುಂಬಿ ಹರಿಯುತ್ತಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ ಹಾಗೂ ಹುಬ್ಬಳ್ಳಿ ಸೇರಿದಂತೆ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ಮಲಪ್ರಭೆಯಲ್ಲಿ ನೀರಿನ ಹರಿವು ಹೆಚ್ಚಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚುವ ನಿರೀಕ್ಷೆಯೂ ಮೂಡಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮುಂಗಾರು ಮಳೆ ಆರ್ಭಟ: ತುಂಬಿದ ಜಲಾಶಯ, ಮುಳುಗಿದ ಸೇತುವೆಗಳು, ರೈತರ ಮೊಗದಲ್ಲಿ ಮಂದಹಾಸ&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-heavy-rains-lashing-the-western-ghats-of-maharashtra-seven-lower-level-bridges-in-chikkodi-taluk-flooded-mrq/articleshow-g6yfvh4"/>
        </item>
        <item>
            <title><![CDATA[ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್‌ಗೇಟ್‌ಗಳ ಬದಲಾವಣೆಗೆ ₹42 ಕೋಟಿ ವೆಚ್ಚದ ಟೆಂಡರ್ ಆಹ್ವಾನಿಸಿದ ರಾಜ್ಯ ನೀರಾವರಿ ನಿಗಮ!]]></title>
            <link>https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1</link>
            <guid isPermaLink="true">https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1</guid>
            <pubDate>Fri, 10 Jul 2026 14:41:12 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್&zwnj;ನ 25 ವರ್ಷ ಹಳೆಯ ಕ್ರಸ್ಟ್&zwnj;ಗೇಟ್&zwnj;ಗಳ ಬದಲಿಗೆ ₹42 ಕೋಟಿ ವೆಚ್ಚದಲ್ಲಿ ಹೊಸ, ಆಧುನಿಕ ಸ್ಟೀಲ್ ಗೇಟ್&zwnj;ಗಳನ್ನು ಅಳವಡಿಸಲು ಕರ್ನಾಟಕ ನೀರಾವರಿ ನಿಗಮ ಟೆಂಡರ್ ಕರೆದಿದೆ. ಶಾಸಕ ಸಿದ್ದು ಸವದಿ ಅವರ ನಿರಂತರ ಒತ್ತಾಯದ ಫಲವಾಗಿ, ಬ್ಯಾರೇಜ್&zwnj;ನ ಸುರಕ್ಷತೆ ಮತ್ತು ರೈತರ ಹಿತ ಕಾಯುವ ಈ ಮಹತ್ವದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx5mb0xt1zpvah6y4gydy91b,imgname-hipparagi-barrage--1--1783674274744.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಬಕವಿ-ಬನಹಟ್ಟಿ:&lt;/strong&gt; ಬಾಗಲಕೋಟೆ ಜಿಲ್ಲೆಯ ರೈತರ ಜೀವನಾಡಿಯಾಗಿರುವ 25 ವರ್ಷಗಳಿಂದ ಸತತವಾಗಿ ಯಾವ ಬದಲಾವಣೆಯಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಹಿಪ್ಪರಗಿ ಬ್ಯಾರೇಜ್&zwnj;ನ ಹಳೆಯ ಕ್ರಸ್ಟ್&zwnj;ಗೇಟ್&zwnj;ಗಳ ಬದಲಿಗೆ ಹೊಸ ಆಧುನಿಕ ತಂತ್ರಜ್ಞಾನದ ಸ್ಟೀಲ್ ಕ್ರಸ್ಟ್&zwnj;ಗೇಟ್&zwnj;ಗಳನ್ನು ಅಳವಡಿಸುವ ಮಹತ್ವದ ಕಾಮಗಾರಿಗೆ ಕರ್ನಾಟಕ ನೀರಾವರಿ ನಿಗಮವು ₹ 42 ಕೋಟಿ.ಗಳ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಿದೆ. ಜನವರಿಯಲ್ಲಿ ಬ್ಯಾರೇಜ್&zwnj;ನ 22ನೇಕ್ರಸ್ ಗೇಟ್ ನೀರಿನ ಒತ್ತಡಕ್ಕೆ ಮುರಿದು ಅಪಾರ ನೀರು ಪೋಲಾಗಿತ್ತು. ಬಳಿಕ ಅಂದಾಜು 1.60 ಲಕ್ಷ ರೂ.ದಲ್ಲಿ ಹೊಸ ಗೇಟ್ ಅಳವಡಿಕೆ ಮಾಡಲಾಗಿತ್ತು. ಹೀಗಾಗಿ ಈಗ ಉಳಿದಿರುವ 21 ಹೊಸ ಗೇಟ್&zwnj;ಗಳ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ.&lt;/p&gt;&lt;p&gt;ಹಿಪ್ಪರಗಿ ಬ್ಯಾರೇಜ್&zwnj;ನ ಕ್ರೆಸ್ಟ್ಗೇಟ್&zwnj;ಗಳು ಸವಕಳಿಗೊಂಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣ ನವೀಕರಿಸಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ವಿಧಾನಸಭೆಯಲ್ಲಿ ನಿರಂತರವಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದರು. ಅವರ ಪತ್ರ ನೀಡಿದ ಬಳಿಕ ಸರ್ಕಾರ ಅಗತ್ಯ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.&lt;/p&gt;&lt;p&gt;ಪತ್ರಿಕೆಯೊಂದಿಗೆ ಮಾತನಾಡಿದ ಶಾಸಕ ಸಿದ್ದು ಸವದಿ, 2001ರಲ್ಲಿ ಹಿಪ್ಪರಗಿ ಬ್ಯಾರೇಜ್&zwnj;ಗೆ ಕಬ್ಬಿಣದ ಕ್ರೆಸ್ಟ್ಗೇಟ್&zwnj;ಗಳನ್ನು ಅಳವಡಿಸಲಾಗಿತ್ತು. ಹೈದರಾಬಾದ್&zwnj;ನಿಂದ ಬಂದ ತಜ್ಞರ ಪ್ರಕಾರ ಅವುಗಳ ಬಾಳಿಕೆ 15 ವರ್ಷಗಳಷ್ಟೇ ಇದ್ದರೂ, ಹೆಚ್ಚುವರಿಯಾಗಿ ಸುಮಾರು 10 ವರ್ಷಗಳಿಗೂ ಹೆಚ್ಚು ಅವು ಕಾರ್ಯನಿರ್ವಹಿಸಿವೆ. ಆದರೆ, ಕಳೆದ ಜನವರಿಯಲ್ಲಿ 22ನೇ ಗೇಟ್&zwnj;ನಲ್ಲಿ ಸಂಭವಿಸಿದ ಅವಘಡ ಗೇಟ್&zwnj;ಗಳ ಸ್ಥಿತಿಗತಿಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂಬ ಎಚ್ಚರಿಕೆಯನ್ನು ನೀಡಿತ್ತು ಎಂದರು.&lt;/p&gt;&lt;p&gt;ಈ ಹಿನ್ನೆಲೆಯಲ್ಲಿ ಎಲ್ಲ ಕ್ರೆಸ್ಟ್ಗೇಟ್&zwnj;ಗಳನ್ನು ಹೊಸದಾಗಿ ಅಳವಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದೆವು. ಇದೀಗ ಕಾಮಗಾರಿಗೆ ಟೆಂಡರ್ ಕರೆಯಲಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಈ ಕ್ರಮಕ್ಕಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದರು.&lt;/p&gt;&lt;p&gt;ಈ ಬಾರಿ ಕಬ್ಬಿಣದ ಬದಲಿಗೆ ಉಕ್ಕಿನಿಂದ (ಸ್ಟೀಲ್) ಕ್ರೆಸ್ಟ್ಗೇಟ್&zwnj;ಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳ ಬಾಳಿಕೆ ಸುಮಾರು 50 ವರ್ಷಗಳವರೆಗೆ ಇರಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಒಟ್ಟು 22 ಗೇಟ್&zwnj;ಗಳ ಪೈಕಿ 21 ಗೇಟ್&zwnj;ಗಳನ್ನು ನವೀಕರಿಸಲಾಗುತ್ತದೆ. ಪ್ರಸಕ್ತ ಮಳೆಗಾಲ ಮುಗಿದ ನಂತರ ಕಾಮಗಾರಿ ಆರಂಭವಾಗಲಿದ್ದು, ಮುಂದಿನ ಮಳೆಗಾಲದ ವೇಳೆಗೆ ಹೊಸ ಕ್ರೆಸ್ಟ್ಗೇಟ್&zwnj;ಗಳ ಮೂಲಕವೇ ಬ್ಯಾರೇಜ್&zwnj;ನಲ್ಲಿ ನೀರು ತಡೆಹಿಡಿಯುವ ವ್ಯವಸ್ಥೆ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.&lt;/p&gt;&lt;h2&gt;ತಜ್ಞರ ತಂಡದ ವರದಿಗೆ ಮನ್ನಣೆ:&lt;/h2&gt;&lt;p&gt;ಕಳೆದ ಮೇ ತಿಂಗಳಲ್ಲಿ ಹೈದರಾಬಾದ್&zwnj;ನ ತಜ್ಞರ ವಿಶೇಷ ತಂಡ ಬ್ಯಾರೇಜ್&zwnj;ಗೆ ಭೇಟಿ ನೀಡಿ ಕ್ರೆಸ್ಟ್ಗೇಟ್&zwnj;ಗಳ ಸಮಗ್ರ ಪರಿಶೀಲನೆ ನಡೆಸಿತ್ತು. ಪರಿಶೀಲನೆಯಲ್ಲಿ ಬಹುತೇಕ ಎಲ್ಲ ಗೇಟ್&zwnj;ಗಳು ಸವಕಳಿಗೊಂಡಿರುವುದು ದೃಢಪಟ್ಟಿದ್ದು, ಅವುಗಳನ್ನು ಸಂಪೂರ್ಣವಾಗಿ ನವೀಕರಿಸಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆ ಸುಮಾರು ₹ 42 ಕೋಟಿಗಳ ಅಂದಾಜು ವೆಚ್ಚದಲ್ಲಿ ನವೀಕರಣ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಶಾಸಕ ಸವದಿ ನಿರಂತರ ಆಗ್ರಹದಿಂದ ನೂತನ ಗೇಟ್&zwnj;ಗಳು ಅಳವಡಿಕೆಯಾಗುತ್ತಿದ್ದು, ಶಾಸಕರನ್ನು ಧುರೀಣರಾದ ಸುರೇಶ ಅಕ್ಕಿವಾಟ, ಧರೆಪ್ಪ ಉಳ್ಳಾಗಡ್ಡಿ, ಸಂಜಯ ತೆಗ್ಗಿ, ಆನಂದ ಕಂಪು ಮೊದಲಾದವರು ಅಭಿನಂದಿಸಿದ್ದಾರೆ.&lt;/p&gt;&lt;p&gt;2001ರಲ್ಲಿ ಹಿಪ್ಪರಗಿ ಬ್ಯಾರೇಜ್&zwnj; ಗೆ ಕ್ರಸ್ಟ್&zwnj; ಗೇಟ್ ಅಳವಡಿಸಲಾಗಿತ್ತು. ತಜ್ಞರ ಪ್ರಕಾರ ಅವುಗಳ ಬಾಳಿಕೆ 15 ವರ್ಷ. ಆದರೆ ಹೆಚ್ಚುವರಿಯಾಗಿ 10 ವರ್ಷ ಕಾರ್ಯನಿರ್ವಹಿಸಿವೆ. ಹೊಸಗೇಟ್ ಅಳವಡಿಕೆಗೆ ಸರಕಾರದ ಮೇಲೆ ನಿರಂತರ ಒತ್ತಡ ಹೇರಲಾಗಿತ್ತು.ಹಿಪ್ಪರಗಿ ಬ್ಯಾರೇಜ್&zwnj;ನ ಸುರಕ್ಷತೆ ಮತ್ತು ರೈತರ ಹಿತದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಶ್ಲಾಘನೀಯ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.&lt;/p&gt;&lt;p&gt;-ಸಿದ್ದು ಸವದಿ ತೇರದಾಳ ಶಾಸಕ&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1"/>
        </item>
        <item>
            <title><![CDATA[ಬತ್ತಿದ ಕೃಷ್ಣೆಯ ಒಡಲಲ್ಲಿ ಮತ್ತೆ ಜಲಝೇಂಕಾರ! ರಾಜಾಪೂರ ಬ್ಯಾರೇಜ್‌ನಿಂದ ನೀರು ಬಿಡುಗಡೆ]]></title>
            <link>https://kannada.asianetnews.com/gallery/karnataka-districts/due-to-rains-in-the-krishna-basin-of-maharashtra-water-has-been-released-from-rajapura-barrage-to-river-mrq-goy8wb4</link>
            <guid isPermaLink="true">https://kannada.asianetnews.com/gallery/karnataka-districts/due-to-rains-in-the-krishna-basin-of-maharashtra-water-has-been-released-from-rajapura-barrage-to-river-mrq-goy8wb4</guid>
            <pubDate>Sat, 04 Jul 2026 14:51:34 +0530</pubDate>
            <description><![CDATA[ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಮಳೆಯಿಂದಾಗಿ, ರಾಜಾಪೂರ ಬ್ಯಾರೇಜ್&zwnj;ನಿಂದ ನೀರು ಬಿಡುಗಡೆಯಾಗಿದೆ. ಎರಡು ತಿಂಗಳಿಂದ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದ್ದು, ಬೆಳಗಾವಿ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwp6m98c0dd91w678shh9js1,imgname-krishna-river--4--1783156581644.jpg" type="image/jpeg" height="390" width="690"/>
            <content:encoded><![CDATA[ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಮಳೆಯಿಂದಾಗಿ, ರಾಜಾಪೂರ ಬ್ಯಾರೇಜ್&zwnj;ನಿಂದ ನೀರು ಬಿಡುಗಡೆಯಾಗಿದೆ. ಎರಡು ತಿಂಗಳಿಂದ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದ್ದು, ಬೆಳಗಾವಿ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.&lt;img&gt;&lt;p&gt;ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ಉಪನದಿಗಳು ತುಂಬುತ್ತಿರುವುದರಿಂದ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್&zwnj;ನಿಂದ ಅಂದಾಜು 3500 ಕ್ಯುಸೆಕ್&zwnj;ನಷ್ಟು ನೀರು ಬಿಡುಗಡೆಯಾಗಿದೆ.&lt;/p&gt;&lt;img&gt;&lt;p&gt;ಸದ್ಯ ಬಿಡುಗಡೆಗೊಂಡಿರುವ ನೀರು ಬೆಳಗಾವಿ ಜಿಲ್ಲೆಯ ನೀರಿನ ಬವಣೆಯನ್ನು ಕೊಂಚ ಮಟ್ಟಿಗೆ ತಗ್ಗಿಸಲು ನೆರವಾಗುವುದೇ ವಿನಃ ಬಾಗಲಕೋಟೆ ಜಿಲ್ಲೆಯವರೆಗೆ ತಲುಪುವುದು ಸಾಧ್ಯವಿಲ್ಲ ಎಂಬುವುದು ನೀರಾವರಿ ತಜ್ಞರೇ ಅಭಿಪ್ರಾಯ. ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಹೆಚ್ಚಿದರೆ ಮಾತ್ರ ಕೃಷ್ಣೆ ಮೈದುಂಬಿಕೊಳ್ಳಲು ಸಾಧ್ಯ.&lt;/p&gt;&lt;img&gt;&lt;p&gt;ಮಹಿಷವಾಡಗಿ ಸೇತುವೆಗೆ ಸಂಬಂಧಿಸಿದ ಪಿಲ್ಲರ್ ನಂ.7 ಮತ್ತು 8ರ ನದಿಯೊಳಗಿನ ಕಾರ್ಯ ಪೂರ್ಣಗೊಂಡಿದೆ. ಇನ್ನೆರಡು ದಿನಗಳಲ್ಲಿ 10 ಅಡಿಯಷ್ಟು ಮತ್ತೆ ಎತ್ತರಕ್ಕೆ ಪಿಲ್ಲರ್&zwnj;ಗಳು ನಿರ್ಮಾಣವಾದಲ್ಲಿ ನದಿಯೊಳಗೆ ನೀರಿದ್ದರೂ ಮುಂದಿನ ದಿನಗಳಲ್ಲಿ ಸೇತುವೆ ಕಾಮಗಾರಿ ಸರಾಗವಾಗಿ ನಡೆಯಲಿದೆ ಎಂದು ಶಾಸಕ ಸಿದ್ದು ಸವದಿ ಸ್ಪಷ್ಟಪಡಿಸಿದರು.&lt;/p&gt;&lt;img&gt;&lt;p&gt;ಕಳೆದ ಎರಡು ತಿಂಗಳಿನಿಂದ ಕರ್ನಾಟಕ, ಆಂಧ್ರ ಹಾಗೂ ಮಹಾರಾಷ್ಟ್ರದ ಜೀವನದಿಯಾಗಿರುವ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಖಾಲಿ ಖಾಲಿಯಾಗಿದ್ದ ಕೃಷ್ಣೆಗೆ ಒಮ್ಮೆಲೆ 7 ಸಾವಿರ ಕ್ಯೂಸೇಕ್ ನೀರು ಹರಿದು ಬಂದಿದ್ದು, ನದಿಗೆ ಮತ್ತೆ ಜೀವ ಕಳೆ ಬಂದಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನೀರು ಹರಿದು ಬರುತ್ತಿದ್ದು, ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ಬೃಹತ್ ನದಿ ಕೃಷ್ಣೆ ತನ್ನ ಹಳೆಯ ವೈಭವಕ್ಕೆ ಮರಳಿದೆ.&lt;/p&gt;&lt;img&gt;&lt;p&gt;ನದಿಗೆ ನೀರು ಬರುತ್ತಿರುವುದನ್ನು ಕಂಡು ರೈತರ ಮೊಗದಲ್ಲಿ ಹರ್ಷ ಮೂಡಿದ್ದು, ಇದು ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ರೈತರಿಗೆ ಅತೀ ದೊಡ್ಡ ಅನುಕೂಲ ಮಾಡಿಕೊಡಲಿದೆ. ಇನ್ನು ಒಂದು ವಾರಗಳ ಕಾಲ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/due-to-rains-in-the-krishna-basin-of-maharashtra-water-has-been-released-from-rajapura-barrage-to-river-mrq-goy8wb4"/>
        </item>
        <item>
            <title><![CDATA[School holiday: ಕರ್ನಾಟಕ ಮಳೆ ಆರ್ಭಟ: ಉತ್ತರ ಕನ್ನಡ, ಬೆಳಗಾವಿ ಸೇರಿ ಈ ಜಿಲ್ಲೆಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ]]></title>
            <link>https://kannada.asianetnews.com/karnataka-districts/karnataka-heavy-rain-school-holiday-list-uttara-kannada-belagavi-chikkamagaluru/articleshow-itvggim</link>
            <guid isPermaLink="true">https://kannada.asianetnews.com/karnataka-districts/karnataka-heavy-rain-school-holiday-list-uttara-kannada-belagavi-chikkamagaluru/articleshow-itvggim</guid>
            <pubDate>Mon, 06 Jul 2026 21:15:30 +0530</pubDate>
            <description><![CDATA[ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 07) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01je0hg3jv4vysegq8xa7vs33w,imgname-school-holiday.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮಿತಿಮೀರಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 07) ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಣೆಯಾಗಿದ್ದರೆ, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲೂ ಮಳೆ ಅಬ್ಬರಿಸುತ್ತಿದೆ.&lt;/p&gt;&lt;h2&gt;&lt;strong&gt;1. ಉತ್ತರ ಕನ್ನಡ: ಐದು ತಾಲೂಕುಗಳಲ್ಲಿ ರಜೆ, ರೆಡ್ ಅಲರ್ಟ್ ಘೋಷಣೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳಾದ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಮತ್ತು ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;h2&gt;&lt;strong&gt;2. ಬೆಳಗಾವಿ: ಶಾಲೆಯೊಂದಿಗೆ ಪಿಯು ಕಾಲೇಜುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಬೆಳಗಾವಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಮುಖ ಆದೇಶ ನೀಡಿದ್ದಾರೆ. ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.&lt;/p&gt;&lt;h2&gt;&lt;strong&gt;3. ಚಿಕ್ಕಮಗಳೂರು: ಕಳಸ ತಾಲೂಕಿನಲ್ಲಿ ರಜೆ&lt;/strong&gt;&lt;/h2&gt;&lt;p&gt;ಮಲೆನಾಡು ಭಾಗವಾದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕಳಸ ತಾಲೂಕಿನ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗಳಿಗೆ ನಾಳೆ ರಜೆ ಘೋಷಿಸಿ ತಹಸಿಲ್ದಾರ್ ಆದೇಶಿಸಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಇರುವುದರಿಂದ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರಿಗೆ ಸೂಚನೆ:&lt;/strong&gt;&lt;/h3&gt;&lt;p&gt;ಮಳೆಯ ತೀವ್ರತೆ ಹೆಚ್ಚಿರುವ ಭಾಗಗಳಲ್ಲಿ ಜನರು ಅನಗತ್ಯವಾಗಿ ನದಿ, ಹಳ್ಳ-ಕೊಳ್ಳಗಳು ಮತ್ತು ವಿದ್ಯುತ್ ಕಂಬಗಳ ಹತ್ತಿರ ಹೋಗದಂತೆ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ ನೀಡಿವೆ. ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-heavy-rain-school-holiday-list-uttara-kannada-belagavi-chikkamagaluru/articleshow-itvggim"/>
        </item>
        <item>
            <title><![CDATA[Belagavi: ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು]]></title>
            <link>https://kannada.asianetnews.com/gallery/karnataka-districts/belagavi-family-of-woman-who-vandalized-house-of-young-man-who-eloped-with-married-woman-mrq-ml90z9p</link>
            <guid isPermaLink="true">https://kannada.asianetnews.com/gallery/karnataka-districts/belagavi-family-of-woman-who-vandalized-house-of-young-man-who-eloped-with-married-woman-mrq-ml90z9p</guid>
            <pubDate>Tue, 30 Jun 2026 07:49:18 +0530</pubDate>
            <description><![CDATA[&lt;p&gt;ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwb4vcswtd522zc6x23qknfj,imgname-belagavi--2--1782785618748.jpg" type="image/jpeg" height="390" width="690"/>
            <content:encoded><![CDATA[&lt;p&gt;ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;img&gt;&lt;p&gt;ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಕ್ಕೆ ಆಕ್ರೋಶಗೊಂಡ ಆಕೆಯ ಸಂಬಂಧಿಕರು ಯುವಕನ ಮನೆಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂತ್ರಸ್ತರು ಪೊಲೀಸ್&zwnj; ಆಯುಕ್ತರಿಗೆ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;ಕಳೆದ ಎರಡು ದಿನಗಳ ಹಿಂದೆ ಗ್ರಾಮದ ನಾಗವ್ವ ಎಂಬ ವಿವಾಹಿತೆಯೊಂದಿಗೆ ಯಲ್ಲಪ್ಪ ನಾಯಕ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಾಗವ್ವ ಕಳೆದ ವರ್ಷ ಬಸಪ್ಪ ನಾಯಕ ಎಂಬಾತನನ್ನು ವಿವಾಹವಾಗಿದ್ದಳು. ಬಸಪ್ಪ ನಾಯಕ ಮತ್ತು ಯಲ್ಲಪ್ಪ ನಾಯಕ ಆತ್ಮೀಯ ಸ್ನೇಹಿತರಾಗಿದ್ದು, ಮೂವರೂ ಉದ್ಯಮಭಾಗದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಈ ಘಟನೆಗೆ ಆಕ್ರೋಶಗೊಂಡ ನಾಗವ್ವ ಅವರ ಪೋಷಕರು ಹಾಗೂ ಪತಿಯ ಕಡೆಯ ಸಂಬಂಧಿಕರು ಸೇರಿದಂತೆ ದೊಡ್ಡ ಗುಂಪೊಂದು ಮಾರಕಾಸ್ತ್ರಗಳೊಂದಿಗೆ ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿ ಮನೆಯನ್ನು ಧ್ವಂಸಗೊಳಿಸಿದೆ. ಮನೆಯನ್ನು ಕಳೆದುಕೊಂಡ ಯುವಕನ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ&lt;/p&gt;&lt;img&gt;&lt;p&gt;ದಾಳಿಯಲ್ಲಿ ಮನೆಯ ಹಂಚುಗಳನ್ನು ಒಡೆದು, ಅಲ್ಮಾರಿ, ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಹಾನಿಗೊಳಿಸಲಾಗಿದೆ. ಘಟನೆ ವೇಳೆ ಮನೆಯಲ್ಲಿದ್ದ ಯಲ್ಲಪ್ಪನ ಪೋಷಕರು ಜೀವಭಯದಿಂದ ಪರಾರಿಯಾಗಿದ್ದು, ಅದೃಷ್ಟವಶಾತ್&zwnj; ಅಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಮನೆಯಿಂದ ಚಿನ್ನಾಭರಣ, ನಗದು ಹಾಗೂ 25 ಕುರಿಗಳನ್ನು ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಕುಟುಂಬ ಆರೋಪ ಮಾಡಿದೆ&lt;/p&gt;&lt;img&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಕುಟುಂಬ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಒಕ್ಕಲಿಗರ ಸಂಘದ ಹಗರಣ: ನನ್ನ ಬಳಿ ದಾಖಲೆ ಇವೆ, ಇಂಚಿಂಚು ಬಿಚ್ಚಿಡ್ತೇನೆ - ಉಮಾಪತಿ ಶ್ರೀನಿವಾಸಗೌಡ&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/belagavi-family-of-woman-who-vandalized-house-of-young-man-who-eloped-with-married-woman-mrq-ml90z9p"/>
        </item>
        <item>
            <title><![CDATA[Belagavi No-Fly Zone Declared: ಬೆಳಗಾವಿಗೆ ಆಗಮಿಸಿದ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್, ಭಾರೀ ಬಿಗಿ ಭದ್ರತೆ! ಕಾರ್ಯಕ್ರಮಕ್ಕೆ ಅನುಮತಿ ಸಿಗುತ್ತಾ?]]></title>
            <link>https://kannada.asianetnews.com/karnataka-districts/security-tightened-in-belagavi-ahead-of-rss-chief-mohan-bhagwats-visit-no-fly-zone-declared-rav/articleshow-nvv5kes</link>
            <guid isPermaLink="true">https://kannada.asianetnews.com/karnataka-districts/security-tightened-in-belagavi-ahead-of-rss-chief-mohan-bhagwats-visit-no-fly-zone-declared-rav/articleshow-nvv5kes</guid>
            <pubDate>Tue, 07 Jul 2026 05:41:32 +0530</pubDate>
            <description><![CDATA[&lt;p&gt;RSS Chief Mohan Bhagwats Visit belagavi ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸರಸಂಘಚಾಲಕ ಮೋಹನ್ ಭಾಗವತ್(Mohan Bhagwat) ಅವರು ಸೋಮವಾರ ಬೆಳಗಾವಿಗೆ ಆಗಮಿಸಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwwy1h6424ewvjc66pvxn5qs,imgname-----------------------2026-07-07t053029.416-1783382459588.jpg" type="image/jpeg" height="390" width="690"/>
            <content:encoded><![CDATA[&lt;p&gt;ಜು.10ರಿಂದ 3 ದಿನ ಆರ್&zwnj;ಎಸ್&zwnj;ಎಸ್&zwnj; ಬೈಠಕ್&zwnj;ನಲ್ಲಿ ಭಾಗಿ&lt;/p&gt;&lt;p&gt;&lt;strong&gt;ಬೆಳಗಾವಿ (ಜು.7): &lt;/strong&gt;ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸರಸಂಘಚಾಲಕ ಮೋಹನ್ ಭಾಗವತ್(Mohan Bhagwat) ಅವರು ಸೋಮವಾರ ಬೆಳಗಾವಿಗೆ ಆಗಮಿಸಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೈದರಾಬಾದ್&zwnj;ನಿಂದ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾಗವತ್ ಅವರನ್ನು ಆರ್&zwnj;ಎಸ್&zwnj;ಎಸ್&zwnj;ನ ಹಿರಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.&lt;/p&gt;&lt;h2&gt;ಜು.10ರಿಂದ 12ರವರೆಗೆ ಬೆಳಗಾವಿಯಲ್ಲಿ ಆರೆಸ್ಸೆಸ್ ಸಭೆ&lt;/h2&gt;&lt;p&gt;ಜು.10ರಿಂದ 12ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ನಗರಕ್ಕೆ ಆಗಮಿಸಿದ್ದಾರೆ. ಆರ್&zwnj;ಎಸ್&zwnj;ಎಸ್&zwnj;ನ ಶತಮಾನೋತ್ಸವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ದೇಶದ 11 ಕ್ಷೇತ್ರಗಳು ಮತ್ತು 46 ಪ್ರಾಂತಗಳ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು ಹಾಗೂ ಸಂಘಪ್ರೇರಿತ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ನೂರಾರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳು ಹಾಗೂ ಅವರ ವಾಸ್ತವ್ಯದ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ.&lt;/p&gt;&lt;h3&gt;ಒಂಭತ್ತು ದಿನಗಳು ಬೆಳಗಾವಿಯಲ್ಲಿ ಭಾಗವತ್ ವಾಸ್ತವ್ಯ&lt;/h3&gt;&lt;p&gt;ಸಭೆಯ ವಿವಿಧ ಅಧಿವೇಶನಗಳು ಅನಗೋಳದ ಸಂತ ಮೀರಾ ಶಾಲೆ, ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿರುವ ಫೌಂಡ್ರಿ ಕ್ಲಸ್ಟರ್ ಅತಿಥಿಗೃಹ ಹಾಗೂ ಗೂಡ್ಸ್&zwnj;ಶೆಡ್ ರಸ್ತೆಯ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದಲ್ಲಿ ನಡೆಯಲಿವೆ. ಭಾಗವತ್ ಅವರ ಒಂಬತ್ತು ದಿನಗಳ ವಾಸ್ತವ್ಯದ ಅವಧಿಯಲ್ಲಿ ವಿವಿಧ ಹಂತದ ಸಂಘಟನಾ ಸಭೆಗಳು, ಪ್ರಮುಖರೊಂದಿಗೆ ಸಮಾಲೋಚನೆ, ಆಂತರಿಕ ಸಭೆಗಳು ಹಾಗೂ ಮಾರ್ಗದರ್ಶನ ಕಾರ್ಯಕ್ರಮಗಳು ನಡೆಯಲಿವೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/security-tightened-in-belagavi-ahead-of-rss-chief-mohan-bhagwats-visit-no-fly-zone-declared-rav/articleshow-nvv5kes"/>
        </item>
        <item>
            <title><![CDATA[ಬೆಳಗಾವಿ ಕಸದ ತಿಪ್ಪೆಯಿಂದ ಕೇಳಿಬಂತು ಹಸುಗೂಸು ಅರ್ತನಾದ! ಕುರಿಗಾಹಿಯಿಂದ ಗಂಡು ಮಗುವಿನ ರಕ್ಷಣೆ]]></title>
            <link>https://kannada.asianetnews.com/karnataka-districts/newborn-boy-found-in-belagavi-under-bridge-ramdurga-kittur-village-infant-rescue-gdp/articleshow-ogzmv3r</link>
            <guid isPermaLink="true">https://kannada.asianetnews.com/karnataka-districts/newborn-boy-found-in-belagavi-under-bridge-ramdurga-kittur-village-infant-rescue-gdp/articleshow-ogzmv3r</guid>
            <pubDate>Thu, 09 Jul 2026 13:21:30 +0530</pubDate>
            <description><![CDATA[ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ, ಹೆತ್ತ ತಾಯಿಯೇ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದ ಅಮಾನವೀಯ ಘಟನೆ ನಡೆದಿದೆ. ಕುರಿಗಾಹಿಯೊಬ್ಬರು ಮಗುವನ್ನು ರಕ್ಷಿಸಿದ್ದು, ಸದ್ಯ ಮಗು ಆಸ್ಪತ್ರೆಯಲ್ಲಿ ಸುರಕ್ಷಿತವಾಗಿದೆ. ಪೊಲೀಸರು ನಿರ್ದಯಿ ತಾಯಿಗಾಗಿ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwxh3nrnrze4560rw8fhd61b,imgname-newborn-baby-found-in-belagavi-1783402452757.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಹೆತ್ತ ತಾಯಿಯೇ ಮಮತೆಯನ್ನೇ ಮರೆತು, ತಾನು ಜನ್ಮ ನೀಡಿದ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ತಿಪ್ಪೆಯಲ್ಲಿ ಮಗು ಪತ್ತೆಯಾಗಿದೆ.&lt;/p&gt;&lt;h2&gt;ಸೇತುವೆ ಕೆಳಗೆ ಪತ್ತೆಯಾದ ಗಂಡು ಮಗು&lt;/h2&gt;&lt;p&gt;ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ ಗಂಡು ಮಗುವಿನ ಅಳುವಿನ ಧ್ವನಿ ಕೇಳಿ, ಆ ಭಾಗದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿಯೊಬ್ಬರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ಮಗು ಅಸಹಾಯಕ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು, ತಡಮಾಡದೇ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.&lt;/p&gt;&lt;h2&gt;ಮಾನವೀಯತೆ ಮೆರೆದ ಕುರಿಗಾಹಿ&lt;/h2&gt;&lt;p&gt;ಮಗುವನ್ನು ರಕ್ಷಿಸಿದ ತಕ್ಷಣವೇ ಜಾಗರೂಕರಾದ ಕುರಿಗಾಹಿ, ಈ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ತಕ್ಷಣವೇ ಮಗುವನ್ನು ಹೆಚ್ಚಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗುವಿಗೆ ವೈದ್ಯರ ಉಸ್ತುವಾರಿಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಮಗು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ&lt;/h2&gt;&lt;p&gt;ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸವದತ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸುರೇಬಾನ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆಯೇ ರಾಮದುರ್ಗ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ಎಸೆದು ಹೋದ ನಿರ್ದಯಿ ತಾಯಿ ಯಾರು? ಈ ಕೃತ್ಯದ ಹಿಂದಿನ ಕಾರಣವೇನು? ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.&lt;/p&gt;&lt;p&gt;ಶಿಶುವನ್ನು ಕಸಕ್ಕೆ ಎಸೆದು ಹೋಗಿರುವ ಮಹಿಳೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮಾಹಿತಿ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಪರಿಶೀಲನೆ ಮುಂದುವರಿದಿದೆ. ಪ್ರಕರಣವು ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಪಿಎಸ್&zwnj;ಐ ಗುರುರಾಜ ಕಲಬುರ್ಗಿ ಮುಂದಿನ ತನಿಖೆ ಕೈಗೊಂಡಿದ್ದಾರೆ.&amp;nbsp;&lt;/p&gt;]]></content:encoded>
            <category>belagavi</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/newborn-boy-found-in-belagavi-under-bridge-ramdurga-kittur-village-infant-rescue-gdp/articleshow-ogzmv3r"/>
        </item>
        <item>
            <title><![CDATA[ಬರದ ನೆರಳಲ್ಲಿ ಭಾಗ್ಯದಂತೆ ಕಾಲಿಟ್ಟ ಕೃಷ್ಣೆ, ಒಮ್ಮೆಲೆ ಹರಿದ ಐದು ಸಾವಿರ ಕ್ಯೂಸೆಕ್‌ ನೀರು!]]></title>
            <link>https://kannada.asianetnews.com/gallery/state/krishna-river-water-inflow-5000-cusecs-maharashtra-rain-chikkodi-kallola-san-v1qroal</link>
            <guid isPermaLink="true">https://kannada.asianetnews.com/gallery/state/krishna-river-water-inflow-5000-cusecs-maharashtra-rain-chikkodi-kallola-san-v1qroal</guid>
            <pubDate>Fri, 03 Jul 2026 11:57:39 +0530</pubDate>
            <description><![CDATA[&lt;p&gt;ತೀವ್ರ ಬಿಸಿಲಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 5,000 ಕ್ಯೂಸೇಕ್ ನೀರು ಹರಿದು ಬಂದಿದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಕೃಷಿ ಹಾಗೂ ಕುಡಿಯುವ ನೀರಿನ ಭರವಸೆ ಮೂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwkabqwzrt69mnj0a2xz1w15,imgname-krishna-river-chikkodi--1--1783059832735.jpg" type="image/jpeg" height="390" width="690"/>
            <content:encoded><![CDATA[&lt;p&gt;ತೀವ್ರ ಬಿಸಿಲಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 5,000 ಕ್ಯೂಸೇಕ್ ನೀರು ಹರಿದು ಬಂದಿದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಕೃಷಿ ಹಾಗೂ ಕುಡಿಯುವ ನೀರಿನ ಭರವಸೆ ಮೂಡಿಸಿದೆ.&lt;/p&gt;&lt;img&gt;&lt;p&gt;ಕಳೆದ ಎರಡು ತಿಂಗಳಿನಿಂದ ತೀವ್ರ ಬಿಸಿಲಿನ ಬೇಗೆಗೆ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಈಗ ಒಮ್ಮೆಲೆ ಬರೋಬ್ಬರಿ 5,000 ಕ್ಯೂಸೇಕ್ ನೀರು ಹರಿದು ಬಂದಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯೇ ಕೃಷ್ಣೆಯ ಈ ದಿಢೀರ್ ಒಳಹರಿವಿಗೆ ಪ್ರಮುಖ ಕಾರಣವಾಗಿದ್ದು, ಖಾಲಿ ಖಾಲಿಯಾಗಿದ್ದ ನದೀಪಾತ್ರದಲ್ಲಿ ಮತ್ತೆ ನೀರಿನ ಜಲಕಳೆ ಎದ್ದುಕಂಡಿದೆ.&lt;/p&gt;&lt;img&gt;&lt;p&gt;ಕೃಷ್ಣಾ ನದಿಯು ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ರಾಜ್ಯಗಳ ಪಾಲಿಗೆ ಅತ್ಯಂತ ಪ್ರಮುಖ ಜೀವನದಿಯಾಗಿದೆ. ಪ್ರಸ್ತುತ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ, ನದಿಯತ್ತ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕೃಷ್ಣೆ ಮತ್ತೆ ತನ್ನ ಹಳೆಯ ವೈಭವದ ದಿನಗಳಿಗೆ ಮರಳುತ್ತಿದೆ.&lt;/p&gt;&lt;img&gt;&lt;p&gt;ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನದಿಯ ನೀರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಸದ್ಯ ಪ್ರವೇಶಿಸುತ್ತಿದೆ. ನದಿಗೆ ಹೊಸ ನೀರು ಹರಿದು ಬರುತ್ತಿರುವ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಸ್ಥಳೀಯರು ನದೀತೀರದತ್ತ ಧಾವಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಕೃಷ್ಣಾ ನದಿಗೆ ನೀರು ಬಂದಿರುವುದು ಕಂಡು ಗಡಿಭಾಗದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ನದಿಗೆ ನೀರು ಬಂದಿರುವುದರಿಂದ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕೃಷ್ಣಾ ತೀರದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿಗೆ ಭಾರಿ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಕೃಷ್ಣಾ ನದಿಗೆ ಬರುವ ಒಳಹರಿವಿನ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಲಿದೆ.&lt;/p&gt;]]></content:encoded>
            <category>belagavi</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/state/krishna-river-water-inflow-5000-cusecs-maharashtra-rain-chikkodi-kallola-san-v1qroal"/>
        </item>
        <item>
            <title><![CDATA[ಬೆಳಗಾವಿ: ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ, ಶಿವಲಿಂಗದಂತೆ ಕಾಣುವ 300 ವರ್ಷ ಹಿಂದಿನ ಮೆಟ್ಟಿಲುಬಾವಿಗೆ ಮರುಜೀವ!]]></title>
            <link>https://kannada.asianetnews.com/gallery/belagavi/belagavi-300-year-old-adilsahi-stepwell-shivalinga-shape-revived-san-zlfg5dh</link>
            <guid isPermaLink="true">https://kannada.asianetnews.com/gallery/belagavi/belagavi-300-year-old-adilsahi-stepwell-shivalinga-shape-revived-san-zlfg5dh</guid>
            <pubDate>Fri, 03 Jul 2026 14:30:24 +0530</pubDate>
            <description><![CDATA[ಬೆಳಗಾವಿಯಲ್ಲಿ ಕಸ, ಮಣ್ಣಿನಿಂದ ಮುಚ್ಚಿಹೋಗಿದ್ದ 300 ವರ್ಷಗಳಷ್ಟು ಹಳೆಯ, ಆದಿಲ್&zwnj; ಶಾಹಿ ಕಾಲದ ಮೆಟ್ಟಿಲುಬಾವಿಯನ್ನು ಪುನರುಜ್ಜೀವನಗೊಳಿಸಲಾಗಿದೆ. ಶಿವಲಿಂಗದ ಆಕಾರದಲ್ಲಿರುವ ಈ ಐತಿಹಾಸಿಕ ಬಾವಿಯು 80 ಅಡಿ ಆಳವಿದ್ದು, ಪ್ಯಾಸ್&zwnj; ಫೌಂಡೇಷನ್&zwnj; ಮತ್ತು ಸ್ವಯಂಸೇವಕರ ಶ್ರಮದಿಂದ ಮತ್ತೆ ಬೆಳಕಿಗೆ ಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwkk1a2yqzhqy3hsn9crnxwh,imgname-shivalinga-shaped-stepwell-revived-in-belagavi--2--1783068928094.jpg" type="image/jpeg" height="390" width="690"/>
            <content:encoded><![CDATA[ಬೆಳಗಾವಿಯಲ್ಲಿ ಕಸ, ಮಣ್ಣಿನಿಂದ ಮುಚ್ಚಿಹೋಗಿದ್ದ 300 ವರ್ಷಗಳಷ್ಟು ಹಳೆಯ, ಆದಿಲ್&zwnj; ಶಾಹಿ ಕಾಲದ ಮೆಟ್ಟಿಲುಬಾವಿಯನ್ನು ಪುನರುಜ್ಜೀವನಗೊಳಿಸಲಾಗಿದೆ. ಶಿವಲಿಂಗದ ಆಕಾರದಲ್ಲಿರುವ ಈ ಐತಿಹಾಸಿಕ ಬಾವಿಯು 80 ಅಡಿ ಆಳವಿದ್ದು, ಪ್ಯಾಸ್&zwnj; ಫೌಂಡೇಷನ್&zwnj; ಮತ್ತು ಸ್ವಯಂಸೇವಕರ ಶ್ರಮದಿಂದ ಮತ್ತೆ ಬೆಳಕಿಗೆ ಬಂದಿದೆ.&lt;img&gt;&lt;p&gt;ಕಸ, ಮಣ್ಣು ಹಾಗೂ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದ 300 ವರ್ಷಗಳ ಹಿಂದಿನ ಪುರಾತನ ಮೆಟ್ಟಿಲುಬಾವಿಯನ್ನು ಬೆಳಗಾವಿಯಲ್ಲಿ ಪುನರುಜ್ಜೀವನಗೊಳಿಸಲಾಗಿದೆ. ಸುಮಾರು 80 ಅಡಿ ಆಳದ ಮೆಟ್ಟಿಲು ಬಾವಿ ಇದಾಗಿದೆ. ಇದು ಬೆಳಗಾವಿ ಜಿಲ್ಲೆಯ ಐತಿಹಾಸಿಕ ಪರಂಪರೆಯ ಅಮೂಲ್ಯ ಹೆಗ್ಗುರುತು ಎನಿಸಿಕೊಂಡಿದೆ.&lt;/p&gt;&lt;img&gt;&lt;p&gt;ಅಂದಾಜಿನ ಪ್ರಕಾರ 15 ಹಾಗೂ 17ನೇ ಶತಮಾನದ ನಡುವೆ ಆದಿಲ್&zwnj;ಶಾಹಿ ಅಡಳಿತದ ಕಾಲದಲ್ಲಿ ನಿರ್ಮಾಣವಾದ ಬಾವಿ ಇದಾಗಿರಬಹುದು ಎಂದು ಹೇಳಲಾಗಿದೆ. ಬೆಳಗಾವಿ ಮೂಲದ ಪ್ಯಾಸ್&zwnj; ಫೌಂಡೇಷನ್&zwnj;, ಎನ್&zwnj;ಎಸ್&zwnj;ಎಸ್&zwnj; ಸ್ವಯಂಸೇವಕರು ಹಾಗೂ ಸ್ಥಳೀಯ ನಿವಾಸಿಗಳ ಸಹಾಯದಿಂದ ಇದನ್ನು ಪುನರುಜ್ಜೀವನಗೊಳಿಸಲಾಗಿದೆ.&lt;/p&gt;&lt;img&gt;&lt;p&gt;ಈ ಮೆಟ್ಟಿಲುಬಾವಿಗೆ ಒಟ್ಟು 53 ಮೆಟ್ಟಿಲುಗಳಿವೆ. ಇದರ ವಿಶೇಷ ವಿನ್ಯಾಸ ಹೇಗಿದೆಯೆಂದರೆ, ಮೇಲಿನಿಂದ ನೋಡಿದರೆ, ಇಡೀ ಬಾವಿಯ ಆಕೃತಿ ಶಿವಲಿಂಗದಂತೆ ಕಾಣುತ್ತದೆ.&lt;/p&gt;&lt;img&gt;&lt;p&gt;ಹಿಂದಿನ ಕಾಲದಲ್ಲಿ ಗ್ರಾಮಸ್ಥರು, ದನಕರುಗಳು ಹಾಗೂ ಪ್ರಯಾಣಿಕರಿಗೆ ಈ ಮೆಟ್ಟಿಲುಬಾವಿ ನೀರಿನ ಪ್ರಮುಖ ಮೂಲವಾಗಿತ್ತು. ಈ ಬಾವಿಯನ್ನು ಈಗ ಮರುಸ್ಥಾಪನೆ ಮಾಡಿರುವ ಕಾರಣಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಬಾವಿಯಲ್ಲಿ ಹಲವು ವರ್ಷಗಳಿಂದ ಕಸ, ಮಣ್ಣು, ಅವಶೇಷಗಳು ಸಂಗ್ರಹವಾಗಿತ್ತು. ಅದಲ್ಲದೆ, ಗಿಡಗಂಟಿಗಳು ದಟ್ಟವಾಗಿ ಬೆಳೆದಿದ್ದರಿಂದ ಈ ಕೆಲಸ ಸಾಕಷ್ಟು ಶ್ರಮದಾಯವಾಗಿತ್ತು ಎಂದು ಸ್ವಯಂಸೇವಕರೊಬ್ಬರು ಹೇಳಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/belagavi/belagavi-300-year-old-adilsahi-stepwell-shivalinga-shape-revived-san-zlfg5dh"/>
        </item>
    </channel>
</rss>
