<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 22 May 2026 22:58:36 +0530</lastBuildDate>
        <atom:link href="https://kannada.asianetnews.com/rss/bengaluru-rural" rel="self" type="application/rss+xml"/>
        <item>
            <title><![CDATA[ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?]]></title>
            <link>https://kannada.asianetnews.com/politics/greater-bengaluru-authority-elections-buzz-who-will-win-if-polls-are-held-now-gdp-videoshow-2ap0vr5</link>
            <guid isPermaLink="true">https://kannada.asianetnews.com/politics/greater-bengaluru-authority-elections-buzz-who-will-win-if-polls-are-held-now-gdp-videoshow-2ap0vr5</guid>
            <pubDate>Sat, 16 May 2026 13:58:01 +0530</pubDate>
            <description><![CDATA[&lt;p&gt;ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯ ಹಿನ್ನೆಲೆಯಲ್ಲಿ, ರಾಜಧಾನಿಯ ರಾಜಕೀಯ ವಲಯದಲ್ಲಿ ಚರ್ಚೆಗಳು ಗರಿಗೆದರಿವೆ. ಕಾರ್ಪೊರೇಟರ್&zwnj;ಗಳ ಅನುಪಸ್ಥಿತಿಯಿಂದ ಮೂಲಭೂತ ಸೌಲಭ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;]]></description>
            <media:content url="https://geo.dailymotion.com/player/x1tbu.html?video=xa9xmp6" medium="video" height="768" width="1024"/>
            <content:encoded><![CDATA[&lt;p&gt;ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಮತ್ತೊಮ್ಮೆ ಮಹತ್ವದ ರಾಜಕೀಯ ಚರ್ಚೆಗಳ ಕೇಂದ್ರವಾಗಿದ್ದು, ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯ ಸುಳಿವುಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಚುನಾವಣೆ ಘೋಷಣೆ ಇನ್ನೂ ಆಗದಿದ್ದರೂ, &ldquo;ಈಗಲೇ ಚುನಾವಣೆ ನಡೆದರೆ ಗೆಲ್ಲೋದ್ಯಾರು?&rdquo; ಎಂಬ ಪ್ರಶ್ನೆ ಸಾರ್ವಜನಿಕರ ಮಧ್ಯೆ ಕುತೂಹಲ ಹುಟ್ಟಿಸಿದೆ.&lt;/p&gt;&lt;p&gt;ನಗರದ ವಿವಿಧ ಭಾಗಗಳಲ್ಲಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿದಾಗ, ರಾಜಕೀಯ ಪಕ್ಷಗಳ ಮೇಲೆ ಜನರ ವಿಶ್ವಾಸ, ಅಸಮಾಧಾನ ಮತ್ತು ನಿರೀಕ್ಷೆಗಳು ಸ್ಪಷ್ಟವಾಗಿ ಹೊರಹೊಮ್ಮುತ್ತಿವೆ. ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಗಾಂಧಿನಗರ, ಬಸವನಗುಡಿ ಸೇರಿದಂತೆ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಜನರ ನಾಡಿಮಿಡಿತ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗಿದೆ.&lt;/p&gt;&lt;p&gt;ಕಳೆದ ಕೆಲವು ವರ್ಷಗಳಿಂದ ಕಾರ್ಪೊರೇಟರ್&zwnj;ಗಳಿಲ್ಲದೇ ನಗರ ಆಡಳಿತ ನಡೆಯುತ್ತಿರುವುದು ಸಾರ್ವಜನಿಕರ ಜೀವನದ ಮೇಲೆ ಪರಿಣಾಮ ಬೀರಿದೆ. ರಸ್ತೆ, ಒಳಚರಂಡಿ, ಕಸ ನಿರ್ವಹಣೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಲ್ಲಿ ಸಮಸ್ಯೆಗಳು ಹೆಚ್ಚಾಗಿವೆ ಎಂದು ನಾಗರಿಕರು ಹೇಳುತ್ತಿದ್ದಾರೆ. ಸ್ಥಳೀಯ ಪ್ರತಿನಿಧಿಗಳು ಇಲ್ಲದ ಕಾರಣ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ಸಿಗುತ್ತಿಲ್ಲ ಎಂಬುದು ಹಲವರ ಅಸಮಾಧಾನ.&lt;/p&gt;&lt;p&gt;ಮೆಜೆಸ್ಟಿಕ್ ಪ್ರದೇಶದ ವ್ಯಾಪಾರಿಗಳು ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರೆ, ಕೆ.ಆರ್. ಮಾರ್ಕೆಟ್ ಭಾಗದ ಜನರು ಸಂಚಾರ ದಟ್ಟಣೆ ಮತ್ತು ಸ್ವಚ್ಛತೆ ಸಮಸ್ಯೆಗಳನ್ನು ಪ್ರಮುಖವಾಗಿ ಉಲ್ಲೇಖಿಸಿದರು. ಗಾಂಧಿನಗರದಲ್ಲಿ ವ್ಯಾಪಾರಿಗಳು ಸರ್ಕಾರದ ನೀತಿಗಳ ಬಗ್ಗೆ ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದರೆ, ಬಸವನಗುಡಿಯ ನಿವಾಸಿಗಳು ಮೂಲಸೌಕರ್ಯಗಳ ಸುಧಾರಣೆಗೆ ಒತ್ತು ನೀಡುವ ನಾಯಕತ್ವ ಬೇಕೆಂದು ಅಭಿಪ್ರಾಯಪಟ್ಟರು.&lt;/p&gt;&lt;p&gt;ಇನ್ನೊಂದು ಕಡೆ, ಯುವಜನರಲ್ಲಿ ಬದಲಾವಣೆಗಾಗಿ ಆಸಕ್ತಿ ಹೆಚ್ಚುತ್ತಿರುವುದು ಕಂಡುಬಂದಿದೆ. ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಕೆಲವರು ಪ್ರಸ್ತುತ ಆಡಳಿತದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡರೆ, ಇನ್ನೂ ಕೆಲವರು ಆಡಳಿತದಲ್ಲಿ ಪಾರದರ್ಶಕತೆ ಕೊರತೆಯಿದೆ ಎಂದು ಟೀಕಿಸಿದ್ದಾರೆ.&lt;/p&gt;&lt;p&gt;ರಾಜಕೀಯ ಪಕ್ಷಗಳು ಕೂಡ ಚುನಾವಣೆಗೆ ಸಜ್ಜಾಗುತ್ತಿರುವ ಸೂಚನೆಗಳು ಸ್ಪಷ್ಟವಾಗಿವೆ. ಪ್ರಮುಖ ಪಕ್ಷಗಳು ಈಗಾಗಲೇ ತಂತ್ರ ರೂಪಿಸುತ್ತಿದ್ದು, ಮತದಾರರ ಮನ ಗೆಲ್ಲಲು ಯೋಜನೆಗಳನ್ನು ಸಿದ್ಧಪಡಿಸುತ್ತಿವೆ. ನಗರಾಭಿವೃದ್ಧಿ, ಟ್ರಾಫಿಕ್ ನಿರ್ವಹಣೆ, ಹಸಿರು ಪ್ರದೇಶಗಳ ಸಂರಕ್ಷಣೆ ಮತ್ತು ಡಿಜಿಟಲ್ ಆಡಳಿತ ಪ್ರಮುಖ ಅಜೆಂಡಾಗಳಾಗಿ ಹೊರಹೊಮ್ಮುವ ಸಾಧ್ಯತೆ ಇದೆ.&lt;/p&gt;&lt;p&gt;ಒಟ್ಟಿನಲ್ಲಿ, ಗ್ರೇಟರ್ ಬೆಂಗಳೂರು ಚುನಾವಣೆಯು ಕೇವಲ ರಾಜಕೀಯ ಸ್ಪರ್ಧೆಯಲ್ಲ. ಇದು ನಗರದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಹಂತವಾಗಿದೆ. &ldquo;ಈಗ ಚುನಾವಣೆ ನಡೆದರೆ ಯಾರು ಗೆಲ್ಲುತ್ತಾರೆ?&rdquo; ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲವಾದರೂ, ಒಂದು ವಿಷಯ ಮಾತ್ರ ಖಚಿತ &amp;nbsp;ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ನಾಯಕತ್ವಕ್ಕೆ ಈ ಬಾರಿ ಹೆಚ್ಚಿನ ಬೆಂಬಲ ಸಿಗಲಿದೆ.&lt;/p&gt;&lt;p&gt;ರಾಜಧಾನಿ ಬೆಂಗಳೂರು ಮಹಾ ಚುನಾವಣೆಗೆ ಸಜ್ಜಾಗುತ್ತಿದ್ದು, ಜನರ ನಾಡಿಮಿಡಿತ ರಾಜಕೀಯ ಸಮೀಕರಣಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/politics/greater-bengaluru-authority-elections-buzz-who-will-win-if-polls-are-held-now-gdp-videoshow-2ap0vr5"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕಚೇರಿಗೆ ನುಗ್ಗಿದ ಮಹಿಳೆಯಿಂದ ಸಂಘಟನೆ ಮುಖ್ಯಸ್ಥೆ ಎಂದು ಜೀವ ಬೆದರಿಕೆ!]]></title>
            <link>https://kannada.asianetnews.com/karnataka-districts/bengaluru-woman-threatens-real-estate-businessman-demands-rs10-lakh-in-alleged-extortion-case-gdp/articleshow-5khec0x</link>
            <guid isPermaLink="true">https://kannada.asianetnews.com/karnataka-districts/bengaluru-woman-threatens-real-estate-businessman-demands-rs10-lakh-in-alleged-extortion-case-gdp/articleshow-5khec0x</guid>
            <pubDate>Mon, 18 May 2026 12:39:44 +0530</pubDate>
            <description><![CDATA[ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ, ತನ್ನನ್ನು ಸಂಘಟನೆಯ ಮುಖ್ಯಸ್ಥೆ ಎಂದು ಹೇಳಿಕೊಂಡ ಸಂಗೀತ ರಾಮ್ ಎಂಬ ಮಹಿಳೆ ಜೀವ ಬೆದರಿಕೆ ಹಾಕಿದ್ದಾರೆ. ಜಮೀನು ವ್ಯವಹಾರಕ್ಕೆ ಸಂಬಂಧಿಸಿ ಕಚೇರಿಗೆ ನುಗ್ಗಿ 10 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಧಮ್ಕಿ ಹಾಕಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krwykt546ptgag2wj6vv7eyd,imgname-bengaluru-woman-threatens-real-estate-businessman-1779088091299.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ನಗರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ಮಹಿಳೆಯೊಬ್ಬರು ಜೀವ ಬೆದರಿಕೆ ಹಾಕಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಪ್ರಕರಣವು ನಗರದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂಗೀತ ರಾಮ್ ಎಂಬ ಮಹಿಳೆ, ತಾನು &ldquo;ಕರ್ನಾಟಕ ಯುವಸೇನೆ ಮುಖ್ಯಸ್ಥೆ&rdquo; ಹಾಗೂ &ldquo;ಮಹಿಳಾ ಸಂಘದ ಅಧ್ಯಕ್ಷೆ&rdquo; ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಧಮ್ಕಿ ಹಾಕಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಆಕೆಯೊಂದಿಗೆ ಇಬ್ಬರು ಪುರುಷರು ಕೂಡ ಇದ್ದರು ಎನ್ನಲಾಗಿದ್ದು, ಮೂವರು ಸೇರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h2&gt;ರಿಯಲ್ ಎಸ್ಟೇಟ್ ಕಚೇರಿಗೆ ನುಗ್ಗಿ ಗಲಾಟೆ&lt;/h2&gt;&lt;p&gt;ಕೊತ್ತನೂರು ಸಮೀಪದ ಸಂಜಯನಗರದಲ್ಲಿರುವ ವೆಂಕಟರಾಜು ಅವರ ರಿಯಲ್ ಎಸ್ಟೇಟ್ ಕಚೇರಿಗೆ ನುಗ್ಗಿದ ಆರೋಪಿಗಳು, ಶಿವಾಜಿನಗರದಲ್ಲಿ ನಡೆದಿದ್ದ ಜಮೀನು ವ್ಯವಹಾರದ ವಿಚಾರವನ್ನು ಮುಂದಿಟ್ಟುಕೊಂಡು ಗಲಾಟೆ ನಡೆಸಿದ್ದಾರೆ. ವೆಂಕಟರಾಜು ಅವರು ಶಿವಾಜಿನಗರದಲ್ಲಿ ಸೈಟ್&zwnj; ಒಂದನ್ನು ಅಗ್ರಿಮೆಂಟ್ ಮಾಡಿಕೊಂಡಿದ್ದು, ಅದೇ ವಿಚಾರಕ್ಕೆ ಸಂಬಂಧಿಸಿ ಈ ಬೆದರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ನೀನು ಅಗ್ರಿಮೆಂಟ್ ಮಾಡಿಕೊಂಡಿದ್ದೀಯಾ, ಆದರೆ ಆ ಜಾಗಕ್ಕೆ ಹೋಗಬಾರದು. ನಮ್ಮ ತಂಟೆಗೆ ಬರಬಾರದೆಂದರೆ 10 ಲಕ್ಷ ರೂಪಾಯಿ ನೀಡಬೇಕು ಎಂದು ಆರೋಪಿಗಳು ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹಣ ನೀಡದಿದ್ದರೆ 15ರಿಂದ 20 ಜನರನ್ನು ಸೇರಿಸಿಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.&lt;/p&gt;&lt;h2&gt;ಸಂಗೀತ ರಾಮ್ ಸೇರಿದಂತೆ ಮೂವರ ವಿರುದ್ಧ ತನಿಖೆ&lt;/h2&gt;&lt;p&gt;ಇದಲ್ಲದೆ, ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕಚೇರಿಗೆ ನುಗ್ಗಿ ಹಲ್ಲೆ ನಡೆಸುವುದಾಗಿ ಸಹ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ. ಈ ರೀತಿಯ ಜೀವ ಬೆದರಿಕೆಯಿಂದ ಆತಂಕಗೊಂಡ ವೆಂಕಟರಾಜು ಅವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಂಗೀತ ರಾಮ್ ಸೇರಿದಂತೆ ಮೂವರ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಗುರುತು ಮತ್ತು ಹಿನ್ನೆಲೆ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಶೀಘ್ರದಲ್ಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದ್ದು, ಉದ್ಯಮಿಗಳು ಭಯಭೀತರಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-woman-threatens-real-estate-businessman-demands-rs10-lakh-in-alleged-extortion-case-gdp/articleshow-5khec0x"/>
        </item>
        <item>
            <title><![CDATA[ಜನಸ್ನೇಹಿ ಸಾರಿಗೆ ಸೇವೆಯಲ್ಲಿ ಬಿಎಂಟಿಸಿದು ಹೊಸ ಮೈಲಿಗಲ್ಲು: ಸಚಿವ ರಾಮಲಿಂಗಾರೆಡ್ಡಿ]]></title>
            <link>https://kannada.asianetnews.com/karnataka-districts/ramalinga-reddy-bmtc-launches-new-vegadootha-routes-in-hoskote-gvd/articleshow-7dawuww</link>
            <guid isPermaLink="true">https://kannada.asianetnews.com/karnataka-districts/ramalinga-reddy-bmtc-launches-new-vegadootha-routes-in-hoskote-gvd/articleshow-7dawuww</guid>
            <pubDate>Fri, 22 May 2026 22:58:30 +0530</pubDate>
            <description><![CDATA[&lt;p&gt;ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಾರ್ವಜನಿಕರಿಗೆ ಜನಸ್ನೇಹಿ, ಪರಿಸರ ಸ್ನೇಹಿ ಸಾರಿಗೆ ಸೇವೆ ಒದಗಿಸುವ ಮೂಲಕ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h5xj055ewr6x56htzrqk9nkp,imgname-ramalingareddy.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸಕೋಟೆ (ಮೇ.22): &lt;/strong&gt;ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಾರ್ವಜನಿಕರಿಗೆ ಜನಸ್ನೇಹಿ, ಪರಿಸರ ಸ್ನೇಹಿ ಸಾರಿಗೆ ಸೇವೆ ಒದಗಿಸುವ ಮೂಲಕ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದು ಹೊಸಕೋಟೆ ಭಾಗದಲ್ಲೂ ಹೊಸ ಮಾರ್ಗಗಳಲ್ಲಿ ವೇಗದೂತ ಬಸ್ ಸಂಚಾರ ಚಾಲನೆ ನೀಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಪ್ರಸ್ತುತ ಬಿಎಂಟಿಸಿ 50 ಘಟಕಗಳಿಂದ ಪ್ರತಿದಿನ 6275 ಅನುಸೂಚಿಗಳ ಮೂಲಕ 65945 ಸುತ್ತುವಳಿಗಳನ್ನು ನಡೆಸುತ್ತಿದ್ದು, ಸುಮಾರು 45 ಲಕ್ಷ ಪ್ರಯಾಣಿಕರು ಸಂಸ್ಥೆಯ ಸೇವೆ ಪಡೆಯುತ್ತಿದ್ದಾರೆ. ಇದರಲ್ಲಿ 1742 ಎಲೆಕ್ಟ್ರಿಕ್ ಬಸ್&zwnj;ಗಳೂ ಕಾರ್ಯಾಚರಣೆಯಲ್ಲಿವೆ.&lt;/p&gt;&lt;p&gt;ಬೆಂಗಳೂರು ಸುತ್ತಮುತ್ತಲಿನ ಅತ್ತಿಬೆಲೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ಬಿಡದಿ, ಹಾರೋಹಳ್ಳಿ, ಕನಕಪುರ, ತುಮಕೂರು ಸೇರಿದಂತೆ ಹಲವು ಪಟ್ಟಣಗಳಿಗೆ ಈಗಾಗಲೇ 124 ವೇಗದೂತ ಸೇವೆಗಳು ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್.ಕ್ರಾಸ್ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸ ಮಾರ್ಗಗಳನ್ನು ಪರಿಚಯಿಸಲಾಗಿದೆ. ಮುಂದಿನ ವಾರದಲ್ಲಿ ಮಾಗಡಿ ಹಾಗೂ ಕುಣಿಗಲ್&zwnj;ಗೂ ಬಿಎಂಟಿಸಿ ಸೇವೆಗೆ ಚಾಲನೆ ನೀಡಲಾಗುವುದು.&lt;/p&gt;&lt;p&gt;ಹೊಸ ಸೇವೆಯಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರಿಗೆ ವೇಗವಾದ ಮತ್ತು ನೇರ ಸಾರಿಗೆ ಸೌಲಭ್ಯ ದೊರೆಯಲಿದ್ದು, ಬೆಂಗಳೂರಿನ ಟ್ರಾಫಿಕ್ ದಟ್ಟಣೆ ತಪ್ಪಿಸಿ ಸುಲಭ ಸಂಚಾರಕ್ಕೆ ನೆರವಾಗಲಿದೆ ಎಂದು ಹೇಳಿದರು. ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೇಗದೂತ 317 ಎಚ್&zwnj;ಸಿ ಮಾರ್ಗದಲ್ಲಿ ಟಿನ್ ಫ್ಯಾಕ್ಟರಿಯಿಂದ ಎಚ್.ಕ್ರಾಸ್&zwnj;ವರೆಗೆ 7 ಬಸ್&zwnj;ಗಳು 60 ಸುತ್ತುವಳಿಗಳೊಂದಿಗೆ ಪ್ರತಿ 30 ನಿಮಿಷಕ್ಕೊಮ್ಮೆ ಸಂಚರಿಸಲಿವೆ.&lt;/p&gt;&lt;p&gt;ಈ ಮಾರ್ಗದ ಪ್ರಯಾಣ ದರ ₹60 ಆಗಿರುತ್ತದೆ. ಇಎಕ್ಸ್ ಎಸ್&zwnj;ಟಿಆರ್&zwnj;ಆರ್-1 ಮಾರ್ಗದಲ್ಲಿ ಹೊಸಕೋಟೆಯಿಂದ ನೆಲಮಂಗಲದವರೆಗೆ 11 ಬಸ್&zwnj;ಗಳು 25 ಸುತ್ತುವಳಿಗಳೊಂದಿಗೆ ಕಾರ್ಯಾಚರಣೆಗೊಳ್ಳಲಿದ್ದು, ಈ ಮಾರ್ಗದ ಪ್ರಯಾಣ ದರ ₹110 ಆಗಿದ್ದು ಹೊಸಕೋಟೆಯಿಂದ ದೇವನಹಳ್ಳಿ, ಜಿಲ್ಲಾಧಿಕಾರಿ ಕಚೇರಿ, ದೊಡ್ಡಬಳ್ಳಾಪುರ, ಮಧುರೆ ದೇವಸ್ಥಾನದ ಮೂಲಕ ನೆಲಮಂಗಲ ತಲುಪಲಿದೆ. ಇದರಿಂದ ಹೊಸಕೋಟೆ ಹಾಗೂ ನೆಲಮಂಗಲದ ನಾಗರಿಕರಿಗೆ ಜಿಲ್ಲಾಧಿಕಾರಿಗಳ ಕಚೇರಿ ಕೆಲಸ ಕಾರ್ಯಗಳಿಗೆ ಸಂಚರಿಸಲು ಅನುಕೂಲ ಆಗಲಿದೆ. ತನ್ನ ಮನವಿಗೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಧನ್ಯವಾದ ತಿಳಿಸಿದರು.&lt;/p&gt;&lt;h2&gt;&lt;strong&gt;ಉತ್ತಮ ಬೆಳವಣಿಗೆ&lt;/strong&gt;&lt;/h2&gt;&lt;p&gt;ಶಿಡ್ಲಘಟ್ಟ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಬಿಎಂಟಿಸಿ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದೆ. ಸಚಿವರು ಟಿನ್ ಫ್ಯಾಕ್ಟರಿಯಿಂದ ಎಚ್.ಕ್ರಾಸ್&zwnj;ವರೆಗೂ ಬಿಎಂಟಿಸಿ ಸೇವೆ ಆರಂಭಿಸಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಎಚ್.ಕ್ರಾಸ್&zwnj;ನಿಂದ ಜಂಗಮಕೋಟೆ ಕ್ರಾಸ್, ವಿಜಯಪುರ, ದೇವನಹಳ್ಳಿ ಮಾರ್ಗವಾಗಿ ಯಲಹಂಕಕ್ಕೆ ಮತ್ತು ಶಿಡ್ಲಘಟ್ಟ, ಮಳ್ಳೂರು, ಮೇಲೂರು, ವಿಜಯಪುರಕ್ಕೆ ಹಾಗೂ ಎಚ್.ಕ್ರಾಸ್ ನಿಂದ ಚೀಮಂಗಲ ಮಾರ್ಗವಾಗಿ ಶಿಡ್ಲಘಟ್ಟಕ್ಕೆ ಬಿಎಂಟಿಸಿ ಬಸ್ ಸೇವೆ ಒದಗಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.&lt;/p&gt;&lt;p&gt;ಬಿಎಂಟಿಸಿ ಅಧ್ಯಕ್ಷ ವಿಎಸ್.ಆರಾಧ್ಯ ಮಾತನಾಡಿ, ಬಿಎಂಟಿಸಿ ವತಿಯಿಂದ ಹೊಸ ಹೊಸ ಮಾರ್ಗಗಳನ್ನು ಪರಿಚಯಿಸುವ ಮೂಲಕ ಮತ್ತಷ್ಟು ಜನಸ್ನೇಹಿ ಸಾರಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆಲವು ದಿನಗಳ ಹಿಂದೆ ವಜ್ರ ವಿಸ್ತಾರ ಹೆಸರಿನಲ್ಲಿ ಬೆಂಗಳೂರಿನಿಂದ ತುಮಕೂರಿಗೆ 10 ಹವಾನಿಯಂತ್ರಿತ ಬಸ್&zwnj;ಗಳಿಗೆ ಚಾಲನೆ ನೀಡಿದ್ದೇವೆ. ಈಗಾಗಲೆ ಬಿಎಂಟಿಸಿ ವ್ಯಾಪ್ತಿಯಲ್ಲಿ 1800 ಎಲೆಕ್ಟ್ರಿಕ್&zwnj; ಬಸ್&zwnj;ಗಳು ಚಲಿಸುತ್ತಿದ್ದು ಇನ್ನು ಎರಡ್ಮೂರು ವರ್ಷದಲ್ಲಿ ಮತ್ತಷ್ಟು ಎಲೆಕ್ಟ್ರಿಕ್&zwnj; ಬಸ್&zwnj;ಗಳು ಸೇರ್ಪಡೆ ಆಗಲಿದೆ. ಮುಖ್ಯವಾಗಿ ಸಚಿವ ರಾಮಲಿಂಗಾರೆಡ್ಡಿ ಅವರ ಅವಿರತ ಕಾರ್ಯಕ್ಷಮತೆಯಿಂದ ಸಾರಿಗೆ ಸೇವೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.&lt;/p&gt;]]></content:encoded>
            <category>bengaluru-rural</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ramalinga-reddy-bmtc-launches-new-vegadootha-routes-in-hoskote-gvd/articleshow-7dawuww"/>
        </item>
        <item>
            <title><![CDATA[ಬಿಡದಿ ಟೌನ್‌ಶಿಪ್  ಬಗ್ಗೆ ದೇವೇಗೌಡರು ರಾಹುಲ್ ಗಾಂಧಿಗೆ ಯಾಕೆ ಪತ್ರ ಬರೀತಾರೆ? ಅವರು ಮೋದಿಗೆ ಪತ್ರ ಬರೆಯಬೇಕು:ಡಿಕೆಶಿ]]></title>
            <link>https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26</link>
            <guid isPermaLink="true">https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26</guid>
            <pubDate>Wed, 20 May 2026 17:17:06 +0530</pubDate>
            <description><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ಕುಮಾರಸ್ವಾಮಿ ಕಾಲದ್ದೇ ಎಂದು ಸ್ಪಷ್ಟಪಡಿಸಿ, ರೈತರಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks1sa4d6heep209mq8k7qarq,imgname-dk-shivakumar--4--1779250303398.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ಕುಮಾರಸ್ವಾಮಿ ಕಾಲದ್ದೇ ಎಂದು ಸ್ಪಷ್ಟಪಡಿಸಿ, ರೈತರಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ. &amp;nbsp;&lt;/p&gt;&lt;img&gt;&lt;p&gt;ಬೆಂಗಳೂರು: ಬಿಡದಿ ಟೌನ್&zwnj;ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ತಮ್ಮ ಸರ್ಕಾರದ ಮೂರು ವರ್ಷಗಳ ಐತಿಹಾಸಿಕ ಸಾಧನೆಗಳನ್ನು ಹೆಮ್ಮೆಯಿಂದ ಜನರ ಮುಂದೆ ತೆರೆದಿಟ್ಟಿದ್ದಾರೆ.&lt;/p&gt;&lt;p&gt;ಬಿಡದಿ ಟೌನ್&zwnj;ಶಿಪ್ ಮತ್ತು ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಹೆಚ್.ಡಿ. ದೇವೇಗೌಡರು ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದನ್ನು ಡಿ.ಕೆ. ಶಿವಕುಮಾರ್ ತೀವ್ರವಾಗಿ ಪ್ರಶ್ನಿಸಿದ್ದಾರೆ. ಭೂಸ್ವಾಧೀನ ವಿರೋಧಿಸಿ ದೇವೇಗೌಡರು ರಾಹುಲ್ ಗಾಂಧಿಯವರಿಗೆ ಪತ್ರ ಬರೆಯುತ್ತಿರುವುದರ ಅರ್ಥವೇನು? ರಾಹುಲ್ ಗಾಂಧಿ ಅವರೇನಾದರೂ ಈಗ ಅಧಿಕಾರದಲ್ಲಿದ್ದಾರೆಯೇ? ಅವರು ಪತ್ರ ಬರೆಯಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಂದು ತಿರುಗೇಟು ನೀಡಿದರು.&lt;/p&gt;&lt;img&gt;&lt;p&gt;ಇದೇ ವೇಳೆ ದೇವೇಗೌಡರು ಚರ್ಚೆಗೆ ಬರುವಂತೆ ಹಾಕಿರುವ ಪಂಥಾಹ್ವಾನದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಅವರ ಆರೋಗ್ಯದ ದೃಷ್ಟಿಯಿಂದ ನಾನು ಹೆಚ್ಚೇನೂ ಮಾತನಾಡಲ್ಲ, ಅವರನ್ನು ಚರ್ಚೆಗೆ ಕರೆಯುವುದೂ ಇಲ್ಲ. ಆದರೆ, ಇತ್ತೀಚೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಾರ ಪ್ರೀತಿಯಿಂದ ಮಾತನಾಡುತ್ತಿದ್ದಾರೆ. ಆ ಪ್ರೀತಿಯ ಹಿಂದಿನ ಮರ್ಮವೇನೋ ನನಗೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದರು.&lt;/p&gt;&lt;img&gt;&lt;p&gt;ಬಿಡದಿ ಟೌನ್&zwnj;ಶಿಪ್ ಕುರಿತು ಸ್ಪಷ್ಟನೆ ನೀಡಿದ ಡಿ.ಕೆ. ಶಿವಕುಮಾರ್, ಇದು ನನ್ನ ಅವಧಿಯಲ್ಲಿ ಜಾರಿಗೆ ಬಂದ ಯೋಜನೆಯಲ್ಲ. ಸ್ವತಃ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂದ ಯೋಜನೆ. ಆಗ ಇದನ್ನು 'ರೆಡ್ ಝೋನ್' ಮಾಡಲಾಗಿತ್ತು ಮತ್ತು ಸಾಕಷ್ಟು ಜನ ಇದರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಈಗ ನಾವು ಗ್ರೇಟರ್ ಬೆಂಗಳೂರು ಅಥಾರಿಟಿ' (GBA) ಅಡಿಯಲ್ಲಿ ಸ್ಮಾರ್ಟ್ ಟೌನ್&zwnj;ಶಿಪ್ ಮಾಡಲು ಹೊರಟಿದ್ದೇವೆ. ಬಿಡದಿಯನ್ನು ಬೆಂಗಳೂರಿಗೆ ಸೇರಿಸಿದ್ದಕ್ಕಾಗಿ ಸಾವಿರಾರು ರೈತರು ನಮಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೆಐಎಡಿಬಿ (KIADB) ಮೂಲಕವೂ 1,000 ಎಕರೆ ಭೂಸ್ವಾಧೀನ ಮಾಡಲಾಗುತ್ತಿದೆ ಎಂದರು.&lt;/p&gt;&lt;img&gt;&lt;p&gt;ರೈತರ ಹಿತರಕ್ಷಣೆಯ ಕುರಿತು ಮಾತನಾಡುತ್ತಾ, ರೈತರು ಸರ್ಕಾರ ಘೋಷಿಸಿರುವ ಪರಿಹಾರಕ್ಕೆ ಒಪ್ಪಿಗೆ ಸೂಚಿಸಿ, ಭೂಮಿ ನೀಡಲು ಮುಂದೆ ಬಂದಿದ್ದಾರೆ. ಅಲ್ಲದೆ ಪರಿಹಾರದ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನು ಕೇವಲ ಎರಡು ದಿನಗಳಲ್ಲಿ ಇದರ ಅಧಿಕೃತ ನೋಟಿಫಿಕೇಶನ್ ಹೊರಬೀಳಲಿದ್ದು, ಜೂನ್ ಮೊದಲ ವಾರದಿಂದಲೇ ರೈತರ ಖಾತೆಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಇದರಲ್ಲಿ ಶೇ. 40 ರಷ್ಟು ಕಮರ್ಷಿಯಲ್ ಪಾಲು ಇರಲಿದೆ. ರೈತರು ಯಾರೂ ತಮ್ಮ ಜಮೀನನ್ನು ಅಗ್ಗದ ಬೆಲೆಗೆ ಮಧ್ಯವರ್ತಿಗಳಿಗೆ ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು.&lt;/p&gt;&lt;img&gt;&lt;p&gt;ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಕಿರುವ ಬಹಿರಂಗ ಚರ್ಚೆಯ ಸವಾಲನ್ನು ಮುಕ್ತವಾಗಿ ಸ್ವೀಕರಿಸಿದ ಡಿಸಿಎಂ, ಕುಮಾರಣ್ಣ ಅವರೇ ಸಮಯ ಮತ್ತು ಸ್ಥಳವನ್ನು ನಿಗದಿಪಡಿಸಲಿ, ನಾನು ಚರ್ಚೆಗೆ ಸದಾ ಸಿದ್ಧ. ಹಿಂದೆ ಸಾತನೂರಿನಲ್ಲೂ ಅವರ ಸವಾಲನ್ನು ಸ್ವೀಕರಿಸಿದ್ದೆ, ಈಗಲೂ ರೆಡಿ ಇದ್ದೇನೆ. ನನ್ನ ಜೊತೆಗೆ ಶಾಸಕ ಬಾಲಕೃಷ್ಣ ಕೂಡ ಬರುವುದಾಗಿ ಹೇಳಿದ್ದಾರೆ ಎಂದರು.&lt;/p&gt;&lt;p&gt;ಮುಂದುವರಿದು ರೈತರ ಮನವಿಯೊಂದನ್ನು ಕುಮಾರಸ್ವಾಮಿ ಅವರ ಗಮನಕ್ಕೆ ತಂದ ಶಿವಕುಮಾರ್, ಇತ್ತೀಚೆಗೆ ಸಿಮೆಂಟ್ ಹಾಗೂ ಕಬ್ಬಿಣದ ಬೆಲೆ ಗಗನಕ್ಕೇರಿದೆ. ಕುಮಾರಸ್ವಾಮಿ ಅವರು ದೇಶದ ಉಕ್ಕು (ಸ್ಟೀಲ್) ಸಚಿವರಾಗಿದ್ದಾರೆ. 'ಸ್ವಲ್ಪ ಕಬ್ಬಿಣದ ಬೆಲೆ ಕಡಿಮೆ ಮಾಡಲು ಕುಮಾರಣ್ಣನಿಗೆ ಹೇಳಿ' ಎಂದು ರೈತರು ನನ್ನ ಬಳಿ ವಿನಂತಿಸಿದ್ದಾರೆ. ರೈತರ ಪರವಾಗಿ ನಾನು ಕೇಂದ್ರ ಸಚಿವ ಕುಮಾರಣ್ಣ ಅವರಲ್ಲಿ ಕಬ್ಬಿಣದ ಬೆಲೆ ಇಳಿಸುವಂತೆ ಕೋರುತ್ತೇನೆ ಎಂದು ಟಾಂಗ್ ನೀಡಿದರು.&lt;/p&gt;&lt;img&gt;&lt;p&gt;ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಯಶಸ್ವಿಯಾಗಿ 3 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಡಿಸಿಎಂ ಬಿಡುಗಡೆ ಮಾಡಿದರು.&lt;/p&gt;&lt;p&gt;ನಮ್ಮ ಸರ್ಕಾರದ 3 ವರ್ಷಗಳ ಸಾಧನೆ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ ಮತ್ತು ಬಿಹಾರ್ ರಾಜ್ಯಗಳು ಈಗ ನಮ್ಮದೇ ಮಾದರಿಯನ್ನು ತಮ್ಮ ರಾಜ್ಯಗಳಲ್ಲಿ ಘೋಷಣೆ ಮಾಡಿ ನಮ್ಮನ್ನು ಫಾಲೋ ಮಾಡುತ್ತಿವೆ. ರಾಜ್ಯದ 1 ಕೋಟಿ 34 ಲಕ್ಷ ಕುಟುಂಬಗಳು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿದ್ದು, ನೇರವಾಗಿ 1.30 ಲಕ್ಷ ಕೋಟಿ ರೂಪಾಯಿ ಜನರಿಗೆ ತಲುಪಿದೆ. ಗೃಹಲಕ್ಷ್ಮಿಯಲ್ಲಿ 1 ಕೋಟಿ 24 ಲಕ್ಷ ಮಹಿಳೆಯರ ಖಾತೆಗೆ ಒಟ್ಟು 69,000 ಕೋಟಿ ರೂ. ಜಮೆಯಾಗಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ 18,943 ಕೋಟಿ ರೂ. ಭರಿಸಲಾಗಿದೆ. ಗೃಹಜ್ಯೋತಿ ಉಚಿತ ವಿದ್ಯುತ್&zwnj;ಗಾಗಿ 12,000 ಕೋಟಿ ರೂ. ನೀಡಲಾಗಿದೆ. ಯುವನಿಧಿ ಮೂಲಕ ನಿರುದ್ಯೋಗಿ ಯುವಕರಿಗೆ 915 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗಿದೆ.&lt;/p&gt;&lt;p&gt;ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್&zwnj;ನಿಂದ ತತ್ತರಿಸಿದ ಜನರಿಗೆ ಏನೂ ಮಾಡಲಾಗಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ಮೇಲೆ, ಕೋವಿಡ್ ಸಮಯದಲ್ಲಿ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ನೆರವಾಗಿದ್ದೇವೆ ಎಂದರು.&lt;/p&gt;&lt;img&gt;&lt;p&gt;ಮನೆ ಬಾಗಿಲಿಗೆ 'ಇ-ಖಾತಾ' ಹಂಚುವ ಸರ್ಕಾರದ ನಿರ್ಧಾರವನ್ನು ಕ್ರಾಂತಿಕಾರಿ ಹೆಜ್ಜೆ ಎಂದು ಬಣ್ಣಿಸಿದ ಅವರು, ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು 100 ದಿನಗಳ ಕಾಲಾವಕಾಶ ನೀಡಲಾಗಿದ್ದು, ಬಳಿಕ ನಿಯಮಾನುಸಾರ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇನ್ನು ಜಿಬಿಎ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಆಗಸ್ಟ್ 31ರ ಒಳಗಾಗಿ ಚುನಾವಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಚುನಾವಣಾ ಆಯೋಗ ತನ್ನ ಪಾಡಿಗೆ ತಾನು ಪ್ರಕ್ರಿಯೆ ನಡೆಸಲಿದೆ, ನಾವು ಎದುರಿಸಲು ಸಿದ್ಧರಿದ್ದೇವೆ ಎಂದರು.&lt;/p&gt;&lt;p&gt;ನಾವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ವಿರೋಧ ಪಕ್ಷಗಳು ಮಾಡುವ ಟೀಕೆಗಳನ್ನು ನಾವು ಸಂತೋಷದಿಂದ ಸ್ವೀಕರಿಸುತ್ತೇವೆ ಮತ್ತು ನಮ್ಮ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ. ಸರ್ಕಾರಕ್ಕೆ 3 ವರ್ಷ ತುಂಬಿದ ಈ ಸಂದರ್ಭದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಮಾಧ್ಯಮ ಮಿತ್ರರು ಮತ್ತು ವಿರೋಧ ಪಕ್ಷದ ನಾಯಕರಿಗೂ ಧನ್ಯವಾದಗಳು ಎಂದು ಡಿ.ಕೆ. ಶಿವಕುಮಾರ್ ಜವಾಬ್ದಾರಿಯುತವಾಗಿ ತಮ್ಮ ಮಾತು ಮುಗಿಸಿದರು.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/dk-shivakumar-takes-on-jds-leadership-over-bidadi-row-challenges-hdk-to-debate-gdp-8a15m26"/>
        </item>
        <item>
            <title><![CDATA[ಬೆಂಗಳೂರು: ನಿರಾಶ್ರಿತರ ಆಶ್ರಮದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಮಹಿಳಾ ಪ್ರಜೆಗಳು ಗ್ರಿಲ್ ಮುರಿದು ಎಸ್ಕೇಪ್]]></title>
            <link>https://kannada.asianetnews.com/gallery/karnataka-districts/bengaluru-shock-four-foreign-women-escape-from-shelter-home-in-kothanur-gdp-93uo1x7</link>
            <guid isPermaLink="true">https://kannada.asianetnews.com/gallery/karnataka-districts/bengaluru-shock-four-foreign-women-escape-from-shelter-home-in-kothanur-gdp-93uo1x7</guid>
            <pubDate>Sun, 17 May 2026 15:30:32 +0530</pubDate>
            <description><![CDATA[&lt;p&gt;ಬೆಂಗಳೂರಿನ ಕೊತ್ತನೂರು ಬಳಿಯ 'ಹೋಮ್ ಆಫ್ ಹೋಪ್' ನಿರಾಶ್ರಿತ ಕೇಂದ್ರದಿಂದ ನಾಲ್ವರು ಅಕ್ರಮ ವಿದೇಶಿ ಮಹಿಳೆಯರು ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ವೀಸಾ ಅವಧಿ ಮುಗಿದಿದ್ದರಿಂದ FRRO ವಶದಲ್ಲಿದ್ದ ಉಗಾಂಡ ಮತ್ತು ನೈಜೀರಿಯಾ ಮೂಲದ ಈ ಮಹಿಳೆಯರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krtnnq1vj7qqyackspr0c791,imgname-egg-1779011607611.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ಕೊತ್ತನೂರು ಬಳಿಯ 'ಹೋಮ್ ಆಫ್ ಹೋಪ್' ನಿರಾಶ್ರಿತ ಕೇಂದ್ರದಿಂದ ನಾಲ್ವರು ಅಕ್ರಮ ವಿದೇಶಿ ಮಹಿಳೆಯರು ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ವೀಸಾ ಅವಧಿ ಮುಗಿದಿದ್ದರಿಂದ FRRO ವಶದಲ್ಲಿದ್ದ ಉಗಾಂಡ ಮತ್ತು ನೈಜೀರಿಯಾ ಮೂಲದ ಈ ಮಹಿಳೆಯರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರು: ನಗರದಲ್ಲಿ ಆತಂಕಕ್ಕೆ ಕಾರಣವಾಗುವಂತಹ ಘಟನೆ ಒಂದು ನಡೆದಿದೆ. ನಿರಾಶ್ರಿತರಿಗಾಗಿ ಕಾರ್ಯನಿರ್ವಹಿಸುತ್ತಿರುವ ಆಶ್ರಮದಲ್ಲಿ ಅಕ್ರಮ ವಿದೇಶಿ ಪ್ರಜೆಗಳು ಇರಿಸಲಾಗಿತ್ತು. ಆದರೆ ವಿದೇಶಿ ಮಹಿಳೆಯರು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ &lsquo;ಹೋಮ್ ಆಫ್ ಹೋಪ್&rsquo; ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಮಹಿಳೆಯರು ಎಸ್ಕೇಪ್ ಆಗಿದ್ದಾರೆ.&lt;/p&gt;&lt;img&gt;&lt;p&gt;ಮೇ 11ರಂದು ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಶ್ರಮದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಮಹಿಳೆಯರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಆಶ್ರಮದ ಭದ್ರತಾ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಮೇ 11ರಂದು ಘಟನೆ ನಡೆದಿದ್ದು, ಈವರೆಗೆ ಅವರ ಸುಳಿವು ಪತ್ತೆಯಾಗಿಲ್ಲ.&lt;/p&gt;&lt;img&gt;&lt;p&gt;ಪರಾರಿಯಾಗಿರುವ ಮಹಿಳೆಯರನ್ನು ಉಗಾಂಡ ಹಾಗೂ ನೈಜೀರಿಯಾ ಮೂಲದವರು ಎಂದು ಗುರುತಿಸಲಾಗಿದೆ. ಅವರ ಹೆಸರುಗಳನ್ನು ತೋಪಿಷ್ಟ, ನಗವ, ಸಫಿನಾ ಮತ್ತು ಪಿತೀನ ಎಂದು ತಿಳಿದುಬಂದಿದೆ. ಇವರು ವೀಸಾ ಅವಧಿ ಮುಗಿದ ಬಳಿಕವೂ ತಮ್ಮ ದೇಶಕ್ಕೆ ಮರಳದೇ ಭಾರತದಲ್ಲೇ ಅಕ್ರಮವಾಗಿ ಉಳಿದಿದ್ದರು.&lt;/p&gt;&lt;img&gt;&lt;p&gt;ವೀಸಾ ನಿಯಮ ಉಲ್ಲಂಘನೆ ಹಿನ್ನೆಲೆ ಈ ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ವಿದೇಶಿಗರ ನೋಂದಣಿ ಕಚೇರಿ (FRRO) ಅಧಿಕಾರಿಗಳು ಜೈಲಿನಲ್ಲಿ ಜಾಗದ ಕೊರತೆಯ ಕಾರಣದಿಂದ ಅವರನ್ನು &lsquo;ಹೋಮ್ ಆಫ್ ಹೋಪ್&rsquo; ಆಶ್ರಮದಲ್ಲಿ ಇರಿಸಿದ್ದರು. ಆಶ್ರಮದಲ್ಲಿ ಸಾಕಷ್ಟು ವಿದೇಶಿ ಪ್ರಜೆಗಳನ್ನು ಇಟ್ಟುಕೊಳ್ಳಲಾಗಿದ್ದು, ಅವರ ಮೇಲ್ವಿಚಾರಣೆ FRRO ಅಧಿಕಾರಿಗಳ ಜವಾಬ್ದಾರಿಯಲ್ಲಿತ್ತು.&lt;/p&gt;&lt;img&gt;&lt;p&gt;ಈ ಕೇಂದ್ರದಲ್ಲಿ ತಂಗಿದ್ದ ಕೆಲವು ವಿದೇಶಿಗರ ಬಳಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಈಗಾಗಲೇ ಅಕ್ರಮ ಚಟುವಟಿಕೆಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಪರಾರಿಯಾದ ಮಹಿಳೆಯರು ಕೂಡ ಇದೇ ರೀತಿಯ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಮಹಿಳೆಯರಿಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ನಾಕಾಬಂದಿ ಹಾಗೂ ಪರಿಶೀಲನೆ ಹೆಚ್ಚಿಸಲಾಗಿದೆ. ನಿರಾಶ್ರಿತ ಕೇಂದ್ರದಿಂದ ವಿದೇಶಿ ಮಹಿಳೆಯರು ಪರಾರಿಯಾಗಿರುವುದು ನಗರ ಭದ್ರತೆಗೆ ಸವಾಲಾಗಿದ್ದು, ಅಕ್ರಮ ವಲಸಿಗರ ಮೇಲ್ವಿಚಾರಣೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪರಾರಿಯಾದವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bengaluru-shock-four-foreign-women-escape-from-shelter-home-in-kothanur-gdp-93uo1x7"/>
        </item>
        <item>
            <title><![CDATA[ಬಿಬಿಎಂಪಿಯಲ್ಲಿ 40 ಸಾವಿರ ಕೋಟಿ ಹಗರಣ ಆರೋಪ, 9,700 ಪುಟಗಳ ದಾಖಲೆ ಸಹಿತ ದೂರು ಕೊಟ್ಟ ರಮೇಶ್‌ !]]></title>
            <link>https://kannada.asianetnews.com/gallery/karnataka-districts/bengaluru-building-scam-massive-bbmp-corruption-allegation-involving-officials-builders-complaint-by-nr-ramesh-gdp-9apzg2h</link>
            <guid isPermaLink="true">https://kannada.asianetnews.com/gallery/karnataka-districts/bengaluru-building-scam-massive-bbmp-corruption-allegation-involving-officials-builders-complaint-by-nr-ramesh-gdp-9apzg2h</guid>
            <pubDate>Sun, 17 May 2026 21:31:54 +0530</pubDate>
            <description><![CDATA[&lt;p&gt;ಬಿಬಿಎಂಪಿ ಇಲಾಖೆಯಲ್ಲಿ ಸುಮಾರು ₹40 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು &amp;nbsp;ಎನ್&zwnj;.ಆರ್&zwnj;.ರಮೇಶ್&zwnj; ಆರೋಪಿಸಿದ್ದಾರೆ. ಈ ಹಗರಣದಲ್ಲಿ 255 ಅಧಿಕಾರಿಗಳು, 437 ಬಿಲ್ಡರ್&zwnj;ಗಳು ಭಾಗಿಯಾಗಿದ್ದು, 22 ಲಕ್ಷ ಗ್ರಾಹಕರಿಗೆ ವಂಚಿಸಲಾಗಿದೆ ಎಂದು ಲೋಕಾಯುಕ್ತ ಮತ್ತು ಇಡಿಗೆ ದೂರು ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krva0rcevkmpmmmsgh6hkhf2,imgname-sharan-prakash-patil--2--1779032940942.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಿಬಿಎಂಪಿ ಇಲಾಖೆಯಲ್ಲಿ ಸುಮಾರು ₹40 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು &amp;nbsp;ಎನ್&zwnj;.ಆರ್&zwnj;.ರಮೇಶ್&zwnj; ಆರೋಪಿಸಿದ್ದಾರೆ. ಈ ಹಗರಣದಲ್ಲಿ 255 ಅಧಿಕಾರಿಗಳು, 437 ಬಿಲ್ಡರ್&zwnj;ಗಳು ಭಾಗಿಯಾಗಿದ್ದು, 22 ಲಕ್ಷ ಗ್ರಾಹಕರಿಗೆ ವಂಚಿಸಲಾಗಿದೆ ಎಂದು ಲೋಕಾಯುಕ್ತ ಮತ್ತು ಇಡಿಗೆ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಬೆಂಗಳೂರು:&lt;/strong&gt; ಹಿಂದಿನ ಬಿಬಿಎಂಪಿ ನಗರ ಯೋಜನಾ ಇಲಾಖೆಯಿಂದ ನಕಲಿ ಪ್ರಾರಂಭಿಕ ಪ್ರಮಾಣಪತ್ರ(ಸಿಸಿ) ಮತ್ತು ಸ್ವಾಧೀನಾನುಭವ ಪತ್ರ(ಓಸಿ) ನೀಡಿ 22 ಲಕ್ಷ ಗ್ರಾಹಕರಿಗೆ ವಂಚಿಸಿ, ಸುಮಾರು 40 ಸಾವಿರ ಕೋಟಿ ರು.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆಸಿರುವ ಗಂಭೀರ ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ಈ ಹಗರಣ ಸಂಬಂಧ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್&zwnj;.ಆರ್&zwnj;.ರಮೇಶ್&zwnj; ಅವರು ಬಿಬಿಎಂಪಿಯ 255 ಮಂದಿ ಅಧಿಕಾರಿಗಳು ಮತ್ತು 437 ಮಂದಿ ಬಿಲ್ಡರ್&zwnj;ಗಳ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಲೋಕಾಯುಕ್ತಕ್ಕೆ 9,700 ಪುಟಗಳ ದಾಖಲೆ ಸಹಿತ ದೂರು ನೀಡಿದ್ದಾರೆ. ಈ ಹಗರಣ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ/ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.&lt;/p&gt;&lt;img&gt;&lt;p&gt;ಹಿಂದಿನ ಬಿಬಿಎಂಪಿ ಎಂಟು ವಲಯಗಳ ವ್ಯಾಪ್ತಿಯಲ್ಲಿ ಕಳೆದ 16 ವರ್ಷಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಬೃಹತ್ ಕಟ್ಟಡಗಳಿಗೆ ಪಾಲಿಕೆಯ ನಗರ ಯೋಜನೆ ಇಲಾಖೆಯಿಂದ 4,381 ಸಿಸಿ ಮತ್ತು 4,587 ಓಸಿ ನೀಡಲಾಗಿದೆ. ಅಂತೆಯೆ 71,169 ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಪಡೆಯಲಾಗಿದೆ. ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ ಕ್ರೆಡೈ ಮತ್ತು ಬ್ರೈ ಸಂಸ್ಥೆಗಳಲ್ಲಿ ಸದಸ್ಯರಾಗಿರುವ 437 ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಗಳು ನಿರ್ಮಿಸಿರುವ 50ಕ್ಕೂ ಹೆಚ್ಚಿನ ಯೂನಿಟ್&zwnj;ಗಳನ್ನು ಹೊಂದಿರುವ ವಸತಿ ಸಂಕೀರ್ಣಗಳ ಸಂಖ್ಯೆಯೇ ಸುಮಾರು 25 ಸಾವಿರಕ್ಕೂ ಹೆಚ್ಚಿದೆ. ಈ 25 ಸಾವಿರಕ್ಕೂ ಹೆಚ್ಚಿನ ವಸತಿ ಸಂಕೀರ್ಣಗಳಲ್ಲಿ ಸುಮಾರು 22 ಲಕ್ಷ ಯೂನಿಟ್&zwnj;ಗಳಿವೆ ಎಂದು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಮುಂದುವರೆದು, ನಗರದಲ್ಲಿ 98 ಟೆಕ್&zwnj; ಪಾರ್ಕ್&zwnj;ಗಳು, 3,876 ಐಟಿ ಕಂಪನಿಗಳು, 103 ಬಿಟಿ ಕಂಪನಿಗಳು, 4,500ಕ್ಕೂ ಹೆಚ್ಚು ಬೃಹತ್&zwnj; ವಾಣಿಜ್ಯ ಸಂಕೀರ್ಣಗಳು, 217 ಮಾಲ್&zwnj;ಗಳು, 1.10 ಲಕ್ಷ ಕೈಗಾರಿಕಾ ಕಟ್ಟಡಗಳು, 540 ಸ್ಟಾರ್&zwnj; ಹೋಟೆಲ್&zwnj;ಗಳು, 2,850 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು/ ನರ್ಸಿಂಗ್&zwnj; ಹೋಮ್&zwnj;ಗಳು ಮತ್ತು 1,350 ಕಲ್ಯಾಣ ಮಂಟಪಗಳಿವೆ. ಈ ಬೃಹತ್&zwnj; ಕಟ್ಟಡಗಳ ಪೈಕಿ ಶೇ.95ರಷ್ಟು ಕಟ್ಟಡಗಳಿಗೆ ನಕಲಿ ಸಿಸಿ ಮತ್ತು ಓಸಿ ನೀಡಲಾಗಿದೆ. ಸುಮಾರು 25 ಸಾವಿರಕ್ಕೂ ಹೆಚ್ಚಿನ ವಸತಿ ಸಂಕೀರ್ಣಗಳಲ್ಲಿರುವ 22 ಲಕ್ಷ ಫ್ಲ್ಯಾಟ್&zwnj;ಗಳನ್ನು ಕ್ರಯಕ್ಕೆ ಪಡೆದಿರುವ ಶೇ.95ಕ್ಕೂ ಹೆಚ್ಚು ಗ್ರಾಹಕರನ್ನು ವಂಚಿಸಲಾಗಿದೆ ಎಂದು ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಬಿಲ್ಡರ್&zwnj;ಗಳು ಪಾಲಿಕೆ ನಗರ ಯೋಜನೆ ವಿಭಾಗದ ಅಧಿಕಾರಿಗಳಿಗೆ ನಿಗದಿತ ಶುಲ್ಕ ಪಾವತಿಸುವ ಬದಲು ಲಂಚದ ರೂಪದಲ್ಲಿ ಶೇ.25ರಷ್ಟು ಹಣ ನೀಡಿ ತಾವು ನಿರ್ಮಿಸಿದ ಕಟ್ಟಡಗಳಿಗೆ ಸಿಸಿ ಮತ್ತು ಓಸಿ ಪಡೆದಿದ್ದಾರೆ. ಈ ಮುಖಾಂತರ ತಮ್ಮ ಸಂಸ್ಥೆಯನ್ನು ನಂಬಿ ಕ್ರಯಕ್ಕೆ ಫ್ಲ್ಯಾಟ್&zwnj; ಪಡೆದ ಮುಗ್ದ ಗ್ರಾಹಕರನ್ನು ವಂಚಿಸಿದ್ದಾರೆ. ಬಿಲ್ಡರ್&zwnj; ಮಾಫಿಯಾ ಮತ್ತು ನಗರ ಯೋಜನೆ ಇಲಾಖೆಯ ಪರಮ ಭ್ರಷ್ಟ ಅಧಿಕಾರಿಗಳಿಂದ ಕಳೆದ 16 ವರ್ಷಗಳ ಅವಧಿಯಲ್ಲಿ ಪಾಲಿಕೆಗೆ ಸುಮಾರು 40 ಸಾವಿರ ಕೋಟಿ ರು.ಗೂ ಅಧಿಕ ಮೊತ್ತದ ವಂಚನೆಯಾಗಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್&zwnj;.ಆರ್&zwnj;.ರಮೇಶ್ ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bengaluru-building-scam-massive-bbmp-corruption-allegation-involving-officials-builders-complaint-by-nr-ramesh-gdp-9apzg2h"/>
        </item>
        <item>
            <title><![CDATA[ಯುರೋಪ್‌ ಈಗ ಮತ್ತಷ್ಟು ಹತ್ತಿರ: ಬೆಂಗಳೂರು - ಜ್ಯೂರಿಕ್‌ ನೇರ ವಿಮಾನ ಆರಂಭ, ಸ್ವಿಸ್ ಏರ್‌ಲೈನ್ಸ್‌ ಸಿಹಿ ಸುದ್ದಿ]]></title>
            <link>https://kannada.asianetnews.com/business/direct-to-europe-swiss-air-launches-bengaluru-to-zurich-direct-flights-gdp/articleshow-abrheap</link>
            <guid isPermaLink="true">https://kannada.asianetnews.com/business/direct-to-europe-swiss-air-launches-bengaluru-to-zurich-direct-flights-gdp/articleshow-abrheap</guid>
            <pubDate>Tue, 19 May 2026 16:48:15 +0530</pubDate>
            <description><![CDATA[ಸ್ವಿಸ್ ಇಂಟರ್&zwnj;ನ್ಯಾಷನಲ್ ಏರ್&zwnj;ಲೈನ್ಸ್, 2026ರ ಅಕ್ಟೋಬರ್&zwnj;ನಿಂದ ಬೆಂಗಳೂರು ಮತ್ತು ಜ್ಯೂರಿಕ್ ನಡುವೆ ಹೊಸ ನೇರ ವಿಮಾನ ಸೇವೆಯನ್ನು ಆರಂಭಿಸಲಿದೆ. ವಾರದಲ್ಲಿ ಐದು ದಿನ ಲಭ್ಯವಿರುವ ಈ ಸೇವೆಯು, ದಕ್ಷಿಣ ಭಾರತದ ಪ್ರಯಾಣಿಕರಿಗೆ ಯುರೋಪ್ ಮತ್ತು ಉತ್ತರ ಅಮೆರಿಕಾಗೆ ಸುಲಭ ಸಂಪರ್ಕ ಕಲ್ಪಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krzz4qf07z9434f01b6wnmpx,imgname-swiss-air-1779189308895.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ತಂತ್ರಜ್ಞಾನ ನಗರಿ ಬೆಂಗಳೂರಿಗರಿಗೆ ಸ್ವಿಸ್ ಇಂಟರ್&zwnj;ನ್ಯಾಷನಲ್ ಏರ್&zwnj;ಲೈನ್ಸ್ (ಸ್ವಿಸ್&zwnj;) ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಭಾರತ ಮತ್ತು ಸ್ವಿಟ್ಜರ್&zwnj;ಲ್ಯಾಂಡ್ ನಡುವಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ, ಬೆಂಗಳೂರು ಹಾಗೂ ಸ್ವಿಸ್&zwnj;ನ ಪ್ರಮುಖ ನಗರ ಜ್ಯೂರಿಕ್ ನಡುವೆ ಹೊಸದಾಗಿ ನೇರ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಸಂಸ್ಥೆ ಘೋಷಿಸಿದೆ.&lt;/p&gt;&lt;p&gt;2026ರ ಅಕ್ಟೋಬರ್&zwnj;ನಿಂದ ಈ ಹೊಸ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದ್ದು, ವಾರದಲ್ಲಿ ಐದು ದಿನ ಈ ಸೇವೆ ಲಭ್ಯವಿರಲಿದೆ. ಇದರಿಂದಾಗಿ ದಕ್ಷಿಣ ಭಾರತದ ಪ್ರಯಾಣಿಕರು ಜ್ಯೂರಿಕ್ ತಲುಪುವುದು ಮಾತ್ರವಲ್ಲದೆ, ಲುಫ್ತಾನ್ಸಾ ಸಮೂಹದ ಬೃಹತ್ ವಿಮಾನಜಾಲದ ಮೂಲಕ ಯುರೋಪ್ ಮತ್ತು ಉತ್ತರ ಅಮೆರಿಕಾದ ಹಲವು ನಗರಗಳಿಗೆ ಸುಲಭವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ.&lt;/p&gt;&lt;h2&gt;ಬೆಂಗಳೂರನ್ನೇ ಆಯ್ದುಕೊಂಡಿದ್ದೇಕೆ ಸ್ವಿಸ್&zwnj;?&lt;/h2&gt;&lt;p&gt;ಭಾರತದಲ್ಲಿ ಸ್ವಿಸ್ ಏರ್&zwnj;ಲೈನ್ಸ್&zwnj;ನ ಹೊಸ ತಾಣವಾಗಿ ಈಗ ಬೆಂಗಳೂರು ಸೇರ್ಪಡೆಯಾಗಿದೆ. ಕಾರ್ಪೊರೇಟ್ ಪ್ರಯಾಣಿಕರು, ಐಟಿ ತಂತ್ರಜ್ಞರು, ಪ್ರೀಮಿಯಂ ಪ್ರವಾಸಿಗರು ಮತ್ತು ಯುರೋಪ್-ಅಮೆರಿಕಾಗಳಲ್ಲಿ ನೆಲೆಸಿರುವ ಭಾರತೀಯ ಸಮುದಾಯದವರಿಂದ ದಿನೇ ದಿನೇ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಈ ಹೊಸ ಮಾರ್ಗವನ್ನು ಪರಿಚಯಿಸಲಾಗಿದೆ.&lt;/p&gt;&lt;p&gt;ಈ ಬಗ್ಗೆ ಮಾತನಾಡಿರುವ ಸ್ವಿಸ್&zwnj;ನ ಮಾಲೀಕ ಸಂಸ್ಥೆ ಲುಫ್ತಾನ್ಸಾ ಗ್ರೂಪ್&zwnj;ನ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಕೆವಿನ್ ಮಾರ್ಕೆಟ್ಟೆ, ಲುಫ್ತಾನ್ಸಾ ಗ್ರೂಪ್&zwnj;ಗೆ ಭಾರತವು ಅತ್ಯಂತ ಪ್ರಮುಖ ಮಾರುಕಟ್ಟೆಯಾಗಿದೆ. ಜಾಗತಿಕ ಟೆಕ್ ಹಬ್ ಆಗಿರುವ ಬೆಂಗಳೂರಿನಿಂದ ಸ್ವಿಸ್ ಏರ್ ಲೈನ್ಸ್ ಸೇವೆಯನ್ನು ಆರಂಭಿಸುತ್ತಿರುವುದು ನಮಗೆ ಅತೀವ ಸಂತಸ ತಂದಿದೆ. ಜರ್ಮನಿಯ ಫ್ರಾಂಕ್&zwnj;ಫರ್ಟ್ ಮತ್ತು ಮ್ಯೂನಿಕ್ ನಗರಗಳ ಬಳಿಕ, ಬೆಂಗಳೂರಿನಿಂದ ಲುಫ್ತಾನ್ಸಾ ಗ್ರೂಪ್&zwnj;ನ ಮೂರನೇ ಪ್ರಮುಖ ಮಾರ್ಗ ಇದಾಗಲಿದೆ. ಪ್ರಯಾಣಿಕರು ಫಸ್ಟ್ ಕ್ಲಾಸ್ ಸೇರಿದಂತೆ ಅತ್ಯುತ್ತಮ ಸ್ವಿಸ್ ಆತಿಥ್ಯದ ಅನುಭವ ಪಡೆಯಲಿದ್ದಾರೆ ಎಂದು ತಿಳಿಸಿದರು.&lt;/p&gt;&lt;p&gt;ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್&zwnj;) ಮುಖ್ಯ ಕಾರ್ಯಾಚರಣಾಧಿಕಾರಿ ಗಿರೀಶ್ ನಾಯರ್ ಪ್ರತಿಕ್ರಿಯಿಸಿ, ಭಾರತದ ಸಿಲಿಕಾನ್ ಸಿಟಿಯನ್ನು ಜಾಗತಿಕ ಆರ್ಥಿಕ ಕೇಂದ್ರವಾದ ಜ್ಯೂರಿಕ್ ಜೊತೆ ಬೆಸೆಯುವ ಈ ಸೇವೆ, ನಮ್ಮ ಮಾರುಕಟ್ಟೆಯ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ದೇಶದ 78 ನಗರಗಳಿಗೆ ಕನೆಕ್ಷನ್ ಇರುವುದರಿಂದ, ಟಯರ್-2 ಹಾಗೂ ಟಯರ್-3 ನಗರಗಳಿಂದ ಬರುವವರಿಗೂ ಒಂದೇ ಟಿಕೆಟ್&zwnj;ನಲ್ಲಿ ಯುರೋಪ್&zwnj;ಗೆ ಸುಲಭ ಸಂಪರ್ಕ ಸಿಗಲಿದೆ ಎಂದರು.&lt;/p&gt;&lt;h2&gt;ಅತ್ಯುತ್ತಮ ಸೌಲಭ್ಯ&lt;/h2&gt;&lt;p&gt;ಬೆಂಗಳೂರು-ಜ್ಯೂರಿಕ್ ನಡುವಿನ ಈ ವಿಮಾನದಲ್ಲಿ ಪ್ರಯಾಣಿಕರು ಫಸ್ಟ್ ಕ್ಲಾಸ್, ಬಿಸಿನೆಸ್ ಕ್ಲಾಸ್ ಹಾಗೂ ಎಕಾನಮಿ ಕ್ಲಾಸ್ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಅತ್ಯುತ್ತಮ ಊಟ, ಪ್ರೀಮಿಯಂ ಲೌಂಜ್ ಸೇರಿದಂತೆ ಉತ್ತಮ ಆತಿಥ್ಯವನ್ನು ಸಂಸ್ಥೆ ನೀಡಲಿದೆ. ಹೊಸ ಮಾರ್ಗದ ಟಿಕೆಟ್ ಬುಕ್ಕಿಂಗ್ ಇಂದಿನಿಂದಲೇ ಸ್ವಿಸ್ ಸಂಸ್ಥೆಯ ಅಧಿಕೃತ ವೆಬ್&zwnj;ಸೈಟ್ ಹಾಗೂ ಟ್ರಾವೆಲ್ ಏಜೆನ್ಸಿಗಳ ಮೂಲಕ ಲಭ್ಯವಿದೆ.&lt;/p&gt;&lt;p&gt;ಇನ್ನು ಈ ವಿಮಾನಯಾನ ಸೇವೆಯನ್ನು ನೀಡುತ್ತಿರುವ ಲುಫ್ತಾನ್ಸಾ ಜಗತ್ತಿನ ಮುಂಚೂಣಿ ವಿಮಾನಯಾನ ಸಮೂಹವಾಗಿದ್ದು, 164 ದೇಶಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಈ ಸಂಸ್ಥೆ ಕೇವಲ 2025ರಲ್ಲಿ 13.5 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದ್ದು 39.6 ಬಿಲಿಯನ್ ಯುರೋ (ಸರಿಸುಮಾರು 3.6 ಲಕ್ಷ ಕೋಟಿ ರೂ.) ಆದಾಯ ಗಳಿಸಿದೆ. ಪ್ರಯಾಣಿಕರ ಸೇವೆ ಮಾತ್ರವಲ್ಲದೆ ಲಾಜಿಸ್ಟಿಕ್ಸ್, ವಿಮಾನಗಳ ನಿರ್ವಹಣೆ ಮತ್ತು ದುರಸ್ತಿ (ಎಂಆರ್&zwnj;ಒ) ಕ್ಷೇತ್ರಗಳಲ್ಲೂ ಈ ಸಂಸ್ಥೆ ಬಲಿಷ್ಠವಾಗಿದೆ. ಸ್ವಿಸ್ ಏರ್&zwnj;ಲೈನ್ಸ್ ಕೂಡ ಲುಫ್ತಾನ್ಸಾ ಗ್ರೂಪ್&zwnj;ನ ಪ್ರಮುಖ ಅಂಗಸಂಸ್ಥೆಯಾಗಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/business/direct-to-europe-swiss-air-launches-bengaluru-to-zurich-direct-flights-gdp/articleshow-abrheap"/>
        </item>
        <item>
            <title><![CDATA[ಮಂಗಳೂರು ಎಂಆರ್‌ಪಿಎಲ್ ನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಭೂಗತ ಇಂಧನ ಸಂಪರ್ಕದ ಯೋಜನೆ!]]></title>
            <link>https://kannada.asianetnews.com/karnataka-districts/bengaluru-airport-jet-fuel-mrpl-to-build-2-5-mmtpa-atf-pipeline-from-devangonthi-gdp/articleshow-bgow446</link>
            <guid isPermaLink="true">https://kannada.asianetnews.com/karnataka-districts/bengaluru-airport-jet-fuel-mrpl-to-build-2-5-mmtpa-atf-pipeline-from-devangonthi-gdp/articleshow-bgow446</guid>
            <pubDate>Fri, 22 May 2026 18:37:21 +0530</pubDate>
            <description><![CDATA[ಮಂಗಳೂರು ರಿಫೈನರಿ ಅಂಡ್&zwnj; ಪೆಟ್ರೋ ಕೆಮಿಕಲ್ಸ್&zwnj; ಲಿಮಿಟೆಡ್&zwnj; (ಎಂಆರ್&zwnj;ಪಿಎಲ್), ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಮಾನ ಇಂಧನ (ATF) ಪೂರೈಸಲು ಹೊಸ ಪೈಪ್&zwnj;ಲೈನ್ ನಿರ್ಮಿಸಲು ಅನುಮೋದನೆ ಪಡೆದಿದೆ. ದೇವನಗೊಂಡಿಯಿಂದ ವಿಮಾನ ನಿಲ್ದಾಣದವರೆಗೆ ನಿರ್ಮಿಸಲಾಗುವ ಈ ಯೋಜನೆಯು 36 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಹೆಚ್ಚುತ್ತಿರುವ ಇಂಧನ ಬೇಡಿಕೆಯನ್ನು ಪೂರೈಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks7wk8dcjn5q3rtyyvswm5c9,imgname-bengaluru-airport-jet-fuel--1--1779455074732.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ಮಂಗಳೂರು ರಿಫೈನರಿ ಅಂಡ್&zwnj; ಪೆಟ್ರೋ ಕೆಮಿಕಲ್ಸ್&zwnj; ಲಿಮಿಟೆಡ್&zwnj;(ಎಂಆರ್&zwnj;ಪಿಎಲ್) ವತಿಯಿಂದ ಬೆಂಗಳೂರಿಗೆ ವಿಮಾನ ಇಂಧನ (ATF) ಸರಬರಾಜು ಬಲಪಡಿಸುವ ಉದ್ದೇಶದಿಂದ ಮಹತ್ವದ ಯೋಜನೆಗೆ ಅನುಮೋದನೆ ಪಡೆದಿದೆ.&lt;/p&gt;&lt;h2&gt;36 ತಿಂಗಳೊಳಗೆ ಪೂರ್ಣಗೊಳಿಸಲು ನಿರ್ಧಾರ&lt;/h2&gt;&lt;p&gt;ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ (PNGRB) ಎಂಆರ್&zwnj;ಪಿಎಲ್&zwnj;ಗೆ ದೇವನಗೊಂಡಿ ಮಾರ್ಕೆಟಿಂಗ್ ಟರ್ಮಿನಲ್&zwnj;ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗಿನ ಪ್ರಸ್ತುತ ಕಾಮನ್ ಯೂಸರ್ ಫ್ಯೂಯೆಲ್ ಫಾರ್ಮ್ ಹಾಗೂ ನಿರ್ಮಾಣ ಹಂತದಲ್ಲಿರುವ ಸ್ಯಾಟಲೈಟ್ ಫ್ಯೂಯೆಲ್ ಫಾರ್ಮ್&zwnj;ವರೆಗೆ ಏವಿಯೇಷನ್ ಟರ್ಬೈನ್ ಫ್ಯೂಯೆಲ್ (ATF) ಪೈಪ್&zwnj;ಲೈನ್ ನಿರ್ಮಾಣಕ್ಕೆ ಅನುಮತಿ ನೀಡಿದೆ. ಈ ಪೈಪ್&zwnj;ಲೈನ್ ವ್ಯವಸ್ಥೆಯ ಸಾಮರ್ಥ್ಯ 2.5 ಮಿಲಿಯನ್ ಮೆಟ್ರಿಕ್ ಟನ್ ಪ್ರತಿವರ್ಷ (MMTPA) ಆಗಿದ್ದು, ಯೋಜನೆಯನ್ನು 36 ತಿಂಗಳೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.&lt;/p&gt;&lt;p&gt;ಬೆಂಗಳೂರು ವಿಮಾನಯಾನ, ತಂತ್ರಜ್ಞಾನ ಹಾಗೂ ಲಾಜಿಸ್ಟಿಕ್ಸ್ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆ, ಈ ಯೋಜನೆಗೆ ವಿಶೇಷ ಮಹತ್ವ ದೊರೆತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸರಕು ಸಾಗಣೆ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇಂಧನದ ಬೇಡಿಕೆಯೂ ಹೆಚ್ಚುತ್ತಿದೆ.&lt;/p&gt;&lt;h2&gt;ಸಾಗಾಟ ಹೇಗೆ?&lt;/h2&gt;&lt;p&gt;ದೊಡ್ಡ ದಾಸರಹಳ್ಳಿ ಪ್ರದೇಶದಲ್ಲಿರುವ ಎಂಆರ್&zwnj;ಪಿಎಲ್ ದೇವನಗೊಂಡಿ ಮಾರ್ಕೆಟಿಂಗ್ ಟರ್ಮಿನಲ್ ಈಗಾಗಲೇ ಬೆಂಗಳೂರಿನ ಪ್ರಮುಖ ಇಂಧನ ವಿತರಣಾ ಕೇಂದ್ರವಾಗಿ ರೂಪುಗೊಂಡಿದೆ. ಮಂಗಳೂರಿನ ಎಂಆರ್&zwnj;ಪಿಎಲ್ ಘಟಕದಿಂದ PMHBL ಪೈಪ್&zwnj;ಲೈನ್ ಮೂಲಕ ಪೆಟ್ರೋಲ್, ಡೀಸೆಲ್ ಮತ್ತು ಏವಿಯೇಷನ್ ಟರ್ಬೈನ್ ಫ್ಯೂಯೆಲ್&zwnj;ಗಳನ್ನು ಇಲ್ಲಿ ಸಾಗಿಸಲಾಗುತ್ತಿದೆ.&lt;/p&gt;&lt;p&gt;ಈ ಕುರಿತು ಎಂಆರ್&zwnj;ಪಿಎಲ್ ಯೋಜನಾ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಚ್&zwnj;.ವಿ.ಪ್ರಸಾದ್&zwnj; ಮಾತನಾಡಿ, ಬೆಂಗಳೂರು ವಿಮಾನ ನಿಲ್ದಾಣದ ಹೆಚ್ಚುತ್ತಿರುವ ATF ಬೇಡಿಕೆಯನ್ನು ಪೂರೈಸುವುದರ ಜೊತೆಗೆ, ದೇಶದ ಪ್ರಮುಖ ಬೆಳವಣಿಗೆ ಕೇಂದ್ರಗಳಲ್ಲಿ ಎಂಆರ್&zwnj;ಪಿಎಲ್ ತನ್ನ ಹೈಡ್ರೋಕಾರ್ಬನ್ ವ್ಯಾಪ್ತಿಯನ್ನು ವಿಸ್ತರಿಸಲು ಈ ಪೈಪ್&zwnj;ಲೈನ್ ಯೋಜನೆ ಮಹತ್ವದ ವೇದಿಕೆಯಾಗಲಿದೆ ಎಂದು ಹೇಳಿದರು.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-airport-jet-fuel-mrpl-to-build-2-5-mmtpa-atf-pipeline-from-devangonthi-gdp/articleshow-bgow446"/>
        </item>
        <item>
            <title><![CDATA[ಪ್ರೀತ್ಸೆ ಅಂತಾ ಪ್ರಾಣ ತಿನ್ನೋ ಆನೇಕಲ್ ಪ್ರೇಮಿ: ಪ್ರೇಯಸಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ!]]></title>
            <link>https://kannada.asianetnews.com/gallery/karnataka-districts/anekal-lover-boy-climbs-high-tension-pole-after-breakup-somashekhar-chinnayanapalya-sat-bo920at</link>
            <guid isPermaLink="true">https://kannada.asianetnews.com/gallery/karnataka-districts/anekal-lover-boy-climbs-high-tension-pole-after-breakup-somashekhar-chinnayanapalya-sat-bo920at</guid>
            <pubDate>Wed, 20 May 2026 13:48:01 +0530</pubDate>
            <description><![CDATA[ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದಳೆಂಬ ಕಾರಣಕ್ಕೆ ಆನೇಕಲ್ ತಾಲ್ಲೂಕಿನ ಸೋಮಶೇಖರ್ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks26p2m5hvbkjvqtrv3wkxrw,imgname-anekal-lover-boy-1779264326276.jpg" type="image/jpeg" height="390" width="690"/>
            <content:encoded><![CDATA[ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದಳೆಂಬ ಕಾರಣಕ್ಕೆ ಆನೇಕಲ್ ತಾಲ್ಲೂಕಿನ ಸೋಮಶೇಖರ್ ಎಂಬ ಯುವಕ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.&lt;img&gt;&lt;p&gt;&lt;strong&gt;ಬೆಂಗಳೂರು ಗ್ರಾಮಾಂತರ (ಮೇ 20): ಪ್ರೀ&lt;/strong&gt;ತಿಯಲ್ಲಿ ಸೋತವರು ಏನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಆನೇಕಲ್ ತಾಲ್ಲೂಕಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಪ್ರಾಣದ ಹಂಗು ತೊರೆದು ಹೈಡ್ರಾಮಾ ಸೃಷ್ಟಿಸಿರುವ ಘಟನೆ ಆನೇಕಲ್ ತಾಲ್ಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.&lt;/p&gt;&lt;img&gt;&lt;p&gt;ಚಿನ್ನಯ್ಯನಪಾಳ್ಯದ ನಿವಾಸಿಯಾದ ಸೋಮಶೇಖರ್ ಎಂಬ ಯುವಕ ಕಳೆದ 3 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ. ಆದರೆ, ಸೋಮಶೇಖರ್ ಚಟಗಳ ದಾಸನಾಗಿದ್ದೇ ಆತನ ಪ್ರೀತಿಗೆ ಮುಳುವಾಗಿದೆ.&lt;/p&gt;&lt;img&gt;&lt;p&gt;ಈತ ನಿರಂತರವಾಗಿ ಮದ್ಯಪಾನ ಮತ್ತು ಗಾಂಜಾ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ. ಸೋಮಶೇಖರ್&zwnj;ನ ಈ ದುಶ್ಚಟಗಳಿಂದ ಬೇಸತ್ತಿದ್ದ ಯುವತಿ, ಇತ್ತೀಚೆಗೆ ಆತನೊಂದಿಗೆ ಲವ್ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಅಲ್ಲದೆ, 'ನಿನ್ನನ್ನು ಮದುವೆಯಾಗಲು ಸಾಧ್ಯವಿಲ್ಲ' ಎಂದು ಖಡಾಖಂಡಿತವಾಗಿ ಹೇಳಿದ್ದಳು.&lt;/p&gt;&lt;img&gt;&lt;p&gt;ಬುಧವಾರ ಬೆಳಿಗ್ಗೆ ಗಾಂಜಾ ಮತ್ತು ಎಣ್ಣೆ ಅಮಲಿನಲ್ಲಿ ತೇಲುತ್ತಿದ್ದ ಸೋಮಶೇಖರ್, ಪ್ರೇಯಸಿಗೆ ಫೋನ್ ಮಾಡಿದ್ದಾನೆ. ಈ ವೇಳೆ ಮತ್ತೆ ಮದುವೆಯ ಪ್ರಸ್ತಾಪ ಇಟ್ಟಾಗ ಯುವತಿ ನಿರಾಕರಿಸಿದ್ದಾಳೆ. ಇದರಿಂದ ಕೆರಳಿದ ಸೋಮಶೇಖರ್, ಮೊದಲು ಆಕೆಯ ಮನೆಯ ಶೀಟ್&zwnj;ಗಳನ್ನು ಹೊಡೆದು ಧ್ವಂಸಗೊಳಿಸಿ ದಾಂಧಲೆ ನಡೆಸಿದ್ದಾನೆ. ಅಲ್ಲಿಂದ ನೇರವಾಗಿ ಓಡಿ ಬಂದು ಮನೆ ಸಮೀಪವೇ ಇದ್ದ ಸಾವಿನ ದೂತನಂತಿರುವ ಹೈಟೆನ್ಷನ್ ವಿದ್ಯುತ್ ಕಂಬವನ್ನು ಹತ್ತಿದ್ದಾನೆ.&lt;/p&gt;&lt;img&gt;&lt;p&gt;ಸಾವಿರಾರು ವೋಲ್ಟ್ ವಿದ್ಯುತ್ ಹರಿಯುವ ಕಂಬದ ತುತ್ತತುದಿಗೆ ಏರಿ ಕುಳಿತ ಸೋಮಶೇಖರ್, 'ನನ್ನ ಪ್ರೇಯಸಿ ಸ್ಥಳಕ್ಕೆ ಬರಬೇಕು, ಅವಳು ಮದುವೆಗೆ ಒಪ್ಪುವವರೆಗೆ ನಾನು ಕೆಳಗಿಳಿಯುವುದಿಲ್ಲ' ಎಂದು ಹಠ ಹಿಡಿದಿದ್ದಾನೆ. ಇದನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಮಶೇಖರ್&zwnj;ನ ತಂದೆಯೇ ಮಗನ ಈ ಹುಚ್ಚಾಟವನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಆನೇಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಎಷ್ಟೇ ಮನವೊಲಿಸಿದರೂ ಸೋಮಶೇಖರ್ ಮಾತ್ರ ಕೆಳಗಿಳಿಯಲು ಒಪ್ಪದೆ ಹಠ ಮುಂದುವರಿಸಿದ್ದಾನೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿದ್ದಾರೆ.&lt;/p&gt;&lt;img&gt;&lt;p&gt;ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಜಮಾಯಿಸಿದ್ದು, ಯುವಕನ ಹುಚ್ಚಾಟಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಪ್ರಾಣದ ಹಂಗು ತೊರೆದು ಈತ ಮಾಡುತ್ತಿರುವ ಹೈಡ್ರಾಮಾದಿಂದಾಗಿ ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವಕನನ್ನು ಕೆಳಗಿಳಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಶತಪ್ರಯತ್ನ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಅಗ್ನಿಶಾಮಕ ದಳದ ನಿರಂತರ ಪ್ರಯತ್ನದ ಬಳಿಕ ಹೈಟೆನ್ಷನ್ ಕಂಬದಿಂದ ಪಾಗಲ್ ಪ್ರೇಮಿ ಸೋಮಶೇಖರ್&zwnj;ನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಆತನನ್ನು ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ.&lt;/p&gt;]]></content:encoded>
            <category>bengaluru-rural</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/anekal-lover-boy-climbs-high-tension-pole-after-breakup-somashekhar-chinnayanapalya-sat-bo920at"/>
        </item>
        <item>
            <title><![CDATA[ಅಮೆರಿಕದ ಕಚೇರಿಯಲ್ಲಿ ಬೆಂಗಳೂರು ಮಹಿಳೆಗೆ ಕಾದಿತ್ತು ಅಚ್ಚರಿ!ಭಾರತ ಕೆಲಸದ ಸಂಸ್ಕೃತಿ ಪ್ರಶ್ನಿಸಿದ ವಿಡಿಯೋ ಸಖತ್ ವೈರಲ್]]></title>
            <link>https://kannada.asianetnews.com/gallery/private-jobs/bengaluru-woman-questions-india-work-culture-after-us-visit-viral-video-sparks-debate-on-work-life-balance-gdp-bzixanu</link>
            <guid isPermaLink="true">https://kannada.asianetnews.com/gallery/private-jobs/bengaluru-woman-questions-india-work-culture-after-us-visit-viral-video-sparks-debate-on-work-life-balance-gdp-bzixanu</guid>
            <pubDate>Sat, 16 May 2026 19:31:06 +0530</pubDate>
            <description><![CDATA[&lt;p&gt;ಬೆಂಗಳೂರಿನ ವೃತ್ತಿಪರ ಮಹಿಳೆಯೊಬ್ಬರು ಅಮೆರಿಕ ಮತ್ತು ಭಾರತದ ಕೆಲಸದ ಸಂಸ್ಕೃತಿಯ ವ್ಯತ್ಯಾಸವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅಮೆರಿಕದಲ್ಲಿ ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸುವ ಪದ್ಧತಿ ಮತ್ತು ಭಾರತದಲ್ಲಿನ ದೀರ್ಘಾವಧಿಯ ಕೆಲಸದ ನಡುವಿನ ಅಂತರವನ್ನು ಅವರು ಎತ್ತಿ ತೋರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krrg93q7at43kjgxqh4ka1n7,imgname-bengaluru-women-work-culture--1--1778938842855.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ವೃತ್ತಿಪರ ಮಹಿಳೆಯೊಬ್ಬರು ಅಮೆರಿಕ ಮತ್ತು ಭಾರತದ ಕೆಲಸದ ಸಂಸ್ಕೃತಿಯ ವ್ಯತ್ಯಾಸವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅಮೆರಿಕದಲ್ಲಿ ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸುವ ಪದ್ಧತಿ ಮತ್ತು ಭಾರತದಲ್ಲಿನ ದೀರ್ಘಾವಧಿಯ ಕೆಲಸದ ನಡುವಿನ ಅಂತರವನ್ನು ಅವರು ಎತ್ತಿ ತೋರಿಸಿದೆ.&lt;/p&gt;&lt;img&gt;&lt;p&gt;ಭಾರತದಲ್ಲಿ ಕೆಲಸದ ಸಂಸ್ಕೃತಿ ಮತ್ತು ದೈನಂದಿನ ಕಚೇರಿ ದಿನಚರಿ ಮತ್ತೆ ಪ್ರಮುಖ ಚರ್ಚೆಯ ವಿಷಯವಾಗಿದೆ. ದೀರ್ಘ ಕೆಲಸದ ಅವಧಿ, ತಡರಾತ್ರಿ ಸಭೆಗಳು ಹಾಗೂ ನಿರಂತರ ಕಾರ್ಯಭಾರ ಕುರಿತು ಅನೇಕ ಉದ್ಯೋಗಿಗಳು ಮುಕ್ತವಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕೆಲಸ-ಜೀವನ ಸಮತೋಲನದ ಕುರಿತು ಚರ್ಚೆಗಳು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲೇ, ಬೆಂಗಳೂರಿನ ಒಬ್ಬ ವೃತ್ತಿಪರ ಮಹಿಳೆ ಹಂಚಿಕೊಂಡಿರುವ ಇತ್ತೀಚಿನ ವಿಡಿಯೋ ಭಾರತ ಮತ್ತು ಅಮೆರಿಕದ ಕೆಲಸದ ಸಂಸ್ಕೃತಿಗಳ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ತೋರಿಸಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.&lt;/p&gt;&lt;img&gt;&lt;p&gt;ಬೆಂಗಳೂರಿನ ಈ ಮಹಿಳೆ ಕೆಲಸದ ನಿಮಿತ್ತ ಅಮೆರಿಕಕ್ಕೆ ತೆರಳಿದ್ದ ವೇಳೆ ಕಂಡ ಅನುಭವಗಳನ್ನು ವಿಡಿಯೋ ರೂಪದಲ್ಲಿ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ವಿಡಿಯೋ ಮೂಲಕ ವಿವಿಧ ದೇಶಗಳ ಕೆಲಸದ ವೇಳಾಪಟ್ಟಿಗಳು ಮತ್ತು ಕಾರ್ಯಪದ್ಧತಿಗಳ ನಡುವಿನ ವ್ಯತ್ಯಾಸ ಕುರಿತು ಹೊಸ ಚರ್ಚೆಗೆ ವೇದಿಕೆ ಸಿಕ್ಕಿದೆ.&lt;/p&gt;&lt;img&gt;&lt;p&gt;ತಮ್ಮ ವಿಡಿಯೋದಲ್ಲಿ ಅವರು ಅಮೆರಿಕದ ಕೆಲಸದ ವಾತಾವರಣ ಭಾರತದಲ್ಲಿನ ಸಂಸ್ಕೃತಿಗಿಂತ ಬಹಳ ಭಿನ್ನವಾಗಿದೆ ಎಂದು ವಿವರಿಸಿದ್ದಾರೆ. ವಿಶೇಷವಾಗಿ, ಅಲ್ಲಿನ ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಿ ಮನೆಗೆ ತೆರಳುವ ಕ್ರಮ ಅವರನ್ನು ಆಶ್ಚರ್ಯಚಕಿತರನ್ನಾಗಿಸಿದೆ. &ldquo;ಭಾರತೀಯ ಕಾರ್ಪೊರೇಟ್ ಮನೋಭಾವನೆ ಕೆಲವೊಮ್ಮೆ ಅತಿಯಾಗಿ ಕಠಿಣವಾಗಿರುತ್ತದೆ. ನಾವು ಹೆಚ್ಚು ಸಮಯ ಕೆಲಸ ಮಾಡುವುದನ್ನೇ ಸಾಮಾನ್ಯವೆಂದು ಒಪ್ಪಿಕೊಂಡಿದ್ದೇವೆ. ಅಮೆರಿಕದಲ್ಲಿ ನಾನು ಬೆಳಿಗ್ಗೆ 9:30 ಅಥವಾ 10 ಗಂಟೆ ಸುಮಾರಿಗೆ ಕಚೇರಿಗೆ ಹೋದೆ. ಸಂಜೆ 4:30ಕ್ಕೆ ಇಡೀ ಮಹಡಿ ಖಾಲಿಯಾಗಿತ್ತು. 5 ಗಂಟೆಗೆ ನಾನು ಸಹ ಹೊರಬಂದೆ. ಅದರ ನಂತರ ನನಗೆ ನಿಜವಾದ ವಿಶ್ರಾಂತಿ ಅನುಭವವಾಯಿತು ಎಂದಿದ್ದಾರೆ.&lt;/p&gt;&lt;img&gt;&lt;p&gt;ಅವರು ಮುಂದುವರಿದು ಮಾತನಾಡಿ ಬಹಳ ದಿನಗಳ ನಂತರ ಕೆಲಸದ ನಂತರ ಸ್ವಂತ ಸಮಯ ಸಿಕ್ಕಿದ್ದು, ವಾಕಿಂಗ್ ಹೋಗಿ ಸೂರ್ಯಾಸ್ತವನ್ನು ಅನುಭವಿಸಲು ಸಾಧ್ಯವಾಯಿತು. ಈ ಅನುಭವವು ಭಾರತದಲ್ಲಿ ಕೆಲಸ ಮಾಡುವಾಗ ವೈಯಕ್ತಿಕ ಜೀವನಕ್ಕೆ ಎಷ್ಟು ಕಡಿಮೆ ಸಮಯ ಸಿಗುತ್ತದೆ ಎಂಬುದನ್ನು ನೆನಪಿಸಿತು ಎಂದಿದ್ದಾರೆ.&lt;/p&gt;&lt;img&gt;&lt;p&gt;ಭಾರತದಲ್ಲಿನ ತಮ್ಮ ಸಾಮಾನ್ಯ ಕಚೇರಿ ದಿನವನ್ನು ವಿವರಿಸುತ್ತಾ, ಅವರು ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ಕೆಲಸ ರಾತ್ರಿ 10 ಗಂಟೆಯವರೆಗೆ ಮುಂದುವರಿಯುತ್ತದೆ ಎಂದಿದ್ದಾರೆ. ನಿರಂತರ ಸಭೆಗಳು ಮತ್ತು ಕಾರ್ಯಭಾರದಿಂದ ಅಡುಗೆ ಮಾಡುವುದು ಅಥವಾ ಸ್ವಲ್ಪ ಸಮಯ ನಡೆದುಬರುವುದು ಸಹ ಕಷ್ಟಕರವಾಗುತ್ತದೆ ಎಂದಿದ್ದಾರೆ.&lt;/p&gt;&lt;img&gt;&lt;p&gt;&ldquo;ಇದು ನಾನು ಮಾತ್ರವೇ ಅಥವಾ ಭಾರತದಲ್ಲಿ ಕಾರ್ಪೊರೇಟ್ ಪರಿಸರ ಹೆಚ್ಚು ಕಠಿಣವಾಗುತ್ತಿದೆಯೇ?&rdquo; ಎಂಬ ಪ್ರಶ್ನೆಯೊಂದಿಗೆ ಅವರು ವಿಡಿಯೋ ಹಂಚಿಕೊಂಡಿದ್ದು, ಅದು ಹಲವರ ಗಮನ ಸೆಳೆದಿದೆ.&lt;/p&gt;&lt;p&gt;ಅನೇಕ ಬಳಕೆದಾರರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ವೈಯಕ್ತಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದರೂ ಸಹ ಭಾರತದಲ್ಲಿ ಹೆಚ್ಚು ಸಮಯ ಕೆಲಸ ಮಾಡುವುದನ್ನು ನಿಷ್ಠೆ ಮತ್ತು ಉತ್ಪಾದಕತೆಯ ಸಂಕೇತವಾಗಿ ಪರಿಗಣಿಸಲಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಇನ್ನೂ ಕೆಲವರು, ಈ ಸಂಸ್ಕೃತಿ ಹೆಚ್ಚಿದ ಒತ್ತಡ ಮತ್ತು ದೀರ್ಘ ಕೆಲಸದ ಅವಧಿಯನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದು, ಅಮೆರಿಕದಲ್ಲಿ ಫಲಿತಾಂಶ ಆಧಾರಿತ ಮತ್ತು ಸಮತೋಲನದ ಕಾರ್ಯಪದ್ಧತಿ ಕಂಡುಬರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;p&gt;ಒಬ್ಬ ಬಳಕೆದಾರರು, &ldquo;ಸಮಸ್ಯೆ ಕೆಲಸದಲ್ಲಿಲ್ಲ; ಹೆಚ್ಚು ಗಂಟೆಗಳು ಎಂದರೆ ಹೆಚ್ಚು ಉತ್ಪಾದಕತೆ ಎನ್ನುವ ಮನೋಭಾವದಲ್ಲಿದೆ, ಎಂದು ಹೇಳಿದ್ದಾರೆ.&lt;/p&gt;&lt;p&gt;ಇನ್ನೊಬ್ಬರು, &ldquo;ಅಮೆರಿಕದಲ್ಲಿ ಉದ್ಯೋಗಿಗಳು ಬೇಗನೆ ಕೆಲಸ ಪ್ರಾರಂಭಿಸಿ ದಿನವಿಡೀ ಹೆಚ್ಚು ಉತ್ಪಾದಕರಾಗಿರುತ್ತಾರೆ,&rdquo; ಎಂದು ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ಆದರೆ, ಎಲ್ಲರೂ ಈ ಹೋಲಿಕೆಯನ್ನು ಒಪ್ಪಿಕೊಂಡಿಲ್ಲ. ಕೆಲವರು, ಭಾರತೀಯ ಕಂಪನಿಗಳು ಅಮೆರಿಕದ ಕಂಪನಿಗಳೊಂದಿಗೆ ಕೆಲಸ ಮಾಡುವ ಕಾರಣದಿಂದ ಸಮಯ ವ್ಯತ್ಯಾಸವು ಕೆಲಸದ ಅವಧಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.&lt;/p&gt;&lt;h2&gt;ಒಬ್ಬ ಬಳಕೆದಾರರು ವಿವರಿಸುತ್ತಾ,&lt;/h2&gt;&lt;p&gt;ಯುಎಸ್&zwnj; ಕಂಪನಿಗಳೊಂದಿಗೆ ಸಭೆಗಳು ನಡೆಯಬೇಕಾದರೆ, ಭಾರತೀಯ ಉದ್ಯೋಗಿಗಳು ತಮ್ಮ ಕೆಲಸದ ಸಮಯವನ್ನು ವಿಸ್ತರಿಸಬೇಕಾಗುತ್ತದೆ. ಇದು ಅನಿವಾರ್ಯ ಪರಿಸ್ಥಿತಿ. ಭಾರತ ಸ್ವಾವಲಂಬಿಯಾಗುವ ದಿನ, ನಮ್ಮ ಕೆಲಸದ ಸಂಸ್ಕೃತಿ ಕೂಡ ಬದಲಾಗಬಹುದು, ಎಂದು ಹೇಳಿದ್ದಾರೆ.&lt;/p&gt;&lt;img&gt;&lt;p&gt;&amp;nbsp;ಈ ವಿಡಿಯೋವು ಒಂದು ಮಹತ್ವದ ಪ್ರಶ್ನೆಯನ್ನು ಮತ್ತೊಮ್ಮೆ ಮುಂದಿಟ್ಟಿದೆ. ಭಾರತದಲ್ಲಿ ಕೆಲಸದ ಒತ್ತಡ ದಿನದಿಂದ ದಿನಕ್ಕೆ ಹೆಚ್ಚುತ್ತಿದೆಯೇ?&lt;/p&gt;&lt;p&gt;ಇದಕ್ಕೆ ಪ್ರತಿಕ್ರಿಯಿಸಿದ ಅನೇಕರು, ಸಮಯಕ್ಕೆ ಮನೆಗೆ ತೆರಳುವುದು ಇಲ್ಲಿ ಅಪರಾಧದಂತೆ ಭಾಸವಾಗುತ್ತದೆ, ಕೆಲಸ-ಜೀವನ ಸಮತೋಲನ ಇನ್ನೂ ಐಷಾರಾಮಿ ಎಂಬಂತೆ ಕಾಣುತ್ತದೆ. ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಇನ್ನೊಬ್ಬರು ಸಲಹೆ ನೀಡುತ್ತಾ, &ldquo;ತುರ್ತು ಪರಿಸ್ಥಿತಿ ಹೊರತುಪಡಿಸಿ ಸಂಜೆ 7 ಗಂಟೆಯ ನಂತರ ಸಭೆಗಳನ್ನು ನಿರ್ಬಂಧಿಸಬೇಕು ಎಂದಿದ್ದಾರೆ.&lt;/p&gt;&lt;p&gt;ಈ ಘಟನೆ, ಕೆಲಸದ ಸಂಸ್ಕೃತಿಯಲ್ಲಿ ಸಮತೋಲನದ ಅಗತ್ಯತೆಯನ್ನು ಮತ್ತೊಮ್ಮೆ ಒತ್ತಿಹೇಳುತ್ತಿದ್ದು, ಉದ್ಯೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವತ್ತ ಗಮನ ಹರಿಸುವ ಅಗತ್ಯವಿದೆ ಎಂಬ ಸಂದೇಶವನ್ನು ನೀಡುತ್ತಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/private-jobs/bengaluru-woman-questions-india-work-culture-after-us-visit-viral-video-sparks-debate-on-work-life-balance-gdp-bzixanu"/>
        </item>
        <item>
            <title><![CDATA[ಬೆಂಗಳೂರು ಡ್ರಗ್ಸ್ ಜಾಲ: ಚೂಡಿದಾರ ಉಡುಪು ಸಾಗಿಸುವ ನೆಪದಲ್ಲಿ ದೆಹಲಿಯಿಂದ ₹35 ಕೋಟಿ ಎಂಡಿಎಂಎ ಸಾಗಾಟ!]]></title>
            <link>https://kannada.asianetnews.com/karnataka-districts/bangalore-drug-bust-rs-35-crore-mdma-seized-8-arrested-by-hebbal-police-gdp/articleshow-gogiri3</link>
            <guid isPermaLink="true">https://kannada.asianetnews.com/karnataka-districts/bangalore-drug-bust-rs-35-crore-mdma-seized-8-arrested-by-hebbal-police-gdp/articleshow-gogiri3</guid>
            <pubDate>Thu, 21 May 2026 10:56:49 +0530</pubDate>
            <description><![CDATA[ಹೆಬ್ಬಾಳ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ, ಚೂಡಿದಾರ ಉಡುಪುಗಳ ಸೋಗಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಜಾಲವನ್ನು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ, ₹35 ಕೋಟಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks4fy7ykzenvdhft3f80jcf8,imgname-bengaluru-police-1779341139923.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಮಾದಕ ವಸ್ತು ಮಾರಾಟ ಜಾಲ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಹೆಬ್ಬಾಳ ಠಾಣೆ ಪೊಲೀಸರು, ರಾಜಧಾನಿಗೆ ಚೂಡಿದಾರ ಉಡುಪು ಸಾಗಾಣಿಕೆ ನೆಪದಲ್ಲಿ ಡ್ರಗ್ಸ್ ತಂದು ಮಾರುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿಯನ್ನು ಸೆರೆ ಹಿಡಿದು ₹35 ಕೋಟಿ ಮೌಲ್ಯದ ಡ್ರಗ್ಸ್&zwnj; ಜಪ್ತಿ ಮಾಡಿದ್ದಾರೆ. ಇದು ಉಪವಿಭಾಗ ಮಟ್ಟವೊಂದರಲ್ಲಿ ವಶಪಡಿಸಿಕೊಳ್ಳಲಾದ ದೊಡ್ಡ ಪ್ರಮಾಣದ ಡ್ರಗ್ಸ್ ಇದಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.&lt;/p&gt;&lt;p&gt;ದೆಹಲಿಯ ರೀನಾ ಯಾದವ್ ಅಲಿಯಾಸ್ ಬಾಪಿ, ಧೀರಜ್, ಒಬೈನುಜು ರೀಟಾ ಒಕೆಕೆ ಅಲಿಯಾಸ್&zwnj; ಸಾನಿಯಾ, ದೇಬಶಿಶ್ ಬ್ಯಾನರ್ಜಿ ಅಲಿಯಾಸ್ ದೆಬು, ಹರಿಯಾಣದ ಗುರುಗ್ರಾಮ್&zwnj; ದಾನ್ಫ ಜೆರಾಲ್ಡ್&zwnj; ಅಲಿಯಾಸ್ ಡೇವಿಡ್, ಮ್ಯಾಗ್ರೇತ್&zwnj; ಲಿಜಿನಿಕೋ ಚಲೆ, ಅಬ್ದುಲ್ ಸಮ್ಮದ್&zwnj; ಹಾಗೂ ಚೂಡಸಂದ್ರದ ಪಿ.ಮೊಹಮ್ಮದ್ ಮನ್ಸೂರ್&zwnj; ಬಂಧಿತರಾಗಿದ್ದು, ಆರೋಪಿಗಳಿಂದ 17.50 ಕೋಟಿ ರು. ಮೌಲ್ಯದ 17.5 ಕೆಜಿ ಎಂಡಿಎಂಎ ಹಾಗೂ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಈ ಡ್ರಗ್ಸ್&zwnj;ನ ಮಾರುಕಟ್ಟೆ ಮೌಲ್ಯವು ಪ್ರಸುತ್ತ 35 ಕೋಟಿ ರು. ಇದೆ ಎಂದು ಸಿಂಗ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಕೆಲ ದಿನಗಳ ಹಿಂದೆ ಇಬ್ಬರು ಡ್ರಗ್ಸ್ ಪೆಡ್ಲರ್&zwnj;ಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ವೇಳೆ ಮತ್ತೊಂದು ಡ್ರಗ್ಸ್ ಜಾಲದ ಸುಳಿವು ಸಿಕ್ಕಿತು. ಈ ಮಾಹಿತಿ ಆಧರಿಸಿ ಜಂಟಿ ಆಯುಕ್ತ (ಪಶ್ಚಿಮ) ವಂಶಿಕೃಷ್ಣ ಹಾಗೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್&zwnj;.ನೇಮಗೌಡ ಮಾರ್ಗದರ್ಶನದಲ್ಲಿ ಜೆ.ಸಿ.ನಗರದ ಉಪ ವಿಭಾಗದ ಎಸಿಪಿ ಕೆ.ಎಸ್.ತನ್ವೀರ್ ಸಾರಥ್ಯದಲ್ಲಿ ಇನ್ಸ್&zwnj;ಪೆಕ್ಟರ್ ಭೈರ, ಪಿಎಸ್&zwnj;ಐ ವಿನೋದ್ ಜಿರಗಾಲೆ, ಶಿವನಾಂದ್&zwnj; ಹಾಗೂ ಕಿರಣ್ ಸೇರಿದಂತೆ 40 ಮಂದಿ ಪೊಲೀಸರ ತಂಡ ಕಾರ್ಯಾಚರಣೆಗಿಳಿಯಿತು. ದೆಹಲಿ ಹಾಗೂ ಬೆಂಗಳೂರಿನಲ್ಲಿ ಪೆಡ್ಲರ್&zwnj;ಗಳು ಹಾಗೂ ಪೂರೈಕೆದಾರರನ್ನು ತನಿಖಾ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.&lt;/p&gt;&lt;p&gt;ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಖಚಿತ ಮಾಹಿತಿ ಪಡೆದು ಉನ್ನತಿ ಲೇಔಟ್&zwnj;ನ ಮುಖ್ಯರಸ್ತೆಯಲ್ಲಿ ಅಪಾರ್ಟ್&zwnj;ಮೆಂಟ್ ಸಮೀಪ ಮೂವರನ್ನು ಪೊಲೀಸರು ಸೆರೆಹಿಡಿದರು. ಈ ಪೆಡ್ಲರ್&zwnj;ಗಳು ವಿಚಾರಣೆ ಬಾಯ್ಬಿಟ್ಟ ಮಾಹಿತಿ ಆಧರಿಸಿ ದೆಹಲಿಯಲ್ಲಿ ಪೂರೈಕೆದಾರರನ್ನು ಬಂಧಿಸಿ ಕರೆತಂದಿದ್ದಾರೆ. ಈ ಡ್ರಗ್ಸ್ ಪ್ರಕರಣದ ತನಿಖೆ ನಡೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.&lt;/p&gt;&lt;h2&gt;ಕಾರ್ಯಾಚರಣೆ ಹೇಗೆ?&lt;/h2&gt;&lt;p&gt;ಈ ಡ್ರಗ್ಸ್ ಜಾಲವು ಮೂರು ಹಂತದಲ್ಲಿ ಕಾರ್ಯಾಚರಣೆ ನಡೆಸಿದೆ. ದೆಹಲಿಯಲ್ಲಿ ಡ್ರಗ್ಸ್ ದಾಸ್ತಾನು ಮಾಡಿ ಅಲ್ಲಿಂದ ನಗರಕ್ಕೆ ರೈಲು ಹಾಗೂ ಬಸ್ಸುಗಳಲ್ಲಿ ಸಾಗಿಸುತ್ತಿದ್ದರು. ಆನಂತರ ಇಲ್ಲಿನ ಪೆಡ್ಲರ್&zwnj;ಗಳ ಮೂಲಕ ಗ್ರಾಹಕರಿಗೆ ಡ್ರಗ್ಸ್ ಅನ್ನು ದಂಧೆಕೋರರು ಪೂರೈಸುತ್ತಿದ್ದರು. ಪ್ರತಿ ಹಂತದಲ್ಲಿ ವ್ಯವಸ್ಥಿತವಾಗಿ ಲೋಪವಾಗದಂತೆ ಕಾರ್ಯಾಚರಣೆ ನಡೆಸಿದೆ. ಅಂತೆಯೇ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ಸ್ ಮಾಫಿಯಾದಿಂದ ಎಂಡಿಎಂ ಖರೀದಿಸಿ ದೆಹಲಿಗೆ ಗ್ಯಾಂಗ್&zwnj;ಗೆ ಸೆನೆಗಲ್&zwnj; ದೇಶದ ಡೇವಿಡ್ ಹಾಗೂ ತಾಂಜೇನಿಯಾದ ಮ್ಯಾಗ್ರೇತ್&zwnj; ಪೂರೈಸುತ್ತಿದ್ದರು. ಬಳಿಕ ಆ ಡ್ರಗ್ಸ್ ಅನ್ನು ಬೆಂಗಳೂರಿಗೆ ರೈಲಿನಲ್ಲಿ ರೀನಾ ಹಾಗೂ ದೇಬು ಸಾಗಿಸುತ್ತಿದ್ದರು. ಇನ್ನುಳಿದವರು ನಗರದಲ್ಲಿ ಗ್ರಾಹಕರಿಗೆ ಸರಬರಾಜು ಮಾಡುತ್ತಿದ್ದರು. ಪ್ರತಿಯೊಬ್ಬರಿಗೂ ಆನ್&zwnj;ಲೈನ್ ಮೂಲಕ ಹಣ ಸಂದಾಯವಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.&lt;/p&gt;&lt;h2&gt;ಚೂಡಿದಾರ ನೆಪದಲ್ಲಿ ಸಾಗಾಣಿಕೆ&lt;/h2&gt;&lt;p&gt;ದೆಹಲಿಯಿಂದ ಬೆಂಗಳೂರಿಗೆ ಚೂಡಿದಾರ ಉಡುಪು ಸಾಗಿಸುವ ನೆಪದಲ್ಲಿ ಡ್ರಗ್ಸ್ ಸಾಗಾಣಿಕೆಯಾಗಿದೆ. ಚೂಡಿದಾರದೊಳಗೆ ಮೂರು ಕೆಜಿಯಷ್ಟು ಡ್ರಗ್ಸ್ ತುಂಬುತ್ತಿದ್ದರು. ಅಲ್ಲದೆ ಇಸ್ತ್ರಿ ಟೇಬಲ್&zwnj; ಬಾಕ್ಸ್&zwnj;ನಲ್ಲಿ ಸಹ ಡ್ರಗ್ಸ್ ಅನ್ನು ಆರೋಪಿಗಳು ಸಾಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h2&gt;ತನಿಖಾ ತಂಡಕ್ಕೆ ₹2 ಲಕ್ಷ ಬಹುಮಾನ&lt;/h2&gt;&lt;p&gt;ಡ್ರಗ್ಸ್ ದಂಧೆಕೋರರ ವಿರುದ್ಧ ಬೃಹತ್&zwnj; ಬೇಟೆಯಾಡಿದ ತನಿಖಾ ತಂಡಕ್ಕೆ ₹2 ಲಕ್ಷ ನಗದು ಬಹುಮಾನವನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಘೋಷಿಸಿದರು. ಹೊರ ರಾಜ್ಯಗಳಲ್ಲಿ ಹಗಲಿರುಳು ಶ್ರಮಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆಯುಕ್ತರು ಶ್ಲಾಘಿಸಿದರು.&lt;/p&gt;&lt;p&gt;ಡ್ರಗ್ಸ್ ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮತ್ತಷ್ಟು ಬಿರುಸುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗಾಗಿ ಉಪ ವಿಭಾಗ ಮಟ್ಟದಲ್ಲಿ ಸಹ ಬೃಹತ್ ಮಾರಾಟ ಜಾಲವು ಪತ್ತೆಯಾಗಿದೆ. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಮತ್ತಷ್ಟು ಪೂರೈಕೆದಾರರು ಹಾಗೂ ಪೆಡ್ಲರ್&zwnj;ಗಳ ಬಂಧನವಾಗಲಿದೆ.&lt;/p&gt;&lt;p&gt;-ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಆಯುಕ್ತ, ಬೆಂಗಳೂರು ನಗರ&lt;/p&gt;&lt;h2&gt;ಕೆಐಎನಲ್ಲಿಯೂ 3.8 ಕೋಟಿ ಡ್ರಗ್ಸ್&lt;/h2&gt;&lt;p&gt;ವಿದೇಶದಿಂದ ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.82 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೆಐಎಗೆ ಮಂಗಳವಾರ ಬಂದಿಳಿದ ಬ್ಯಾಕಾಂಕ್ ಪ್ರವಾಸಿಗನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಆತನಿಂದ 3.82 ಕೋಟಿ ರು ಮೌಲ್ಯದ 10.92 ಕೆಜಿ ಹೈಡ್ರೋ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bangalore-drug-bust-rs-35-crore-mdma-seized-8-arrested-by-hebbal-police-gdp/articleshow-gogiri3"/>
        </item>
        <item>
            <title><![CDATA[ಕೆಂಪೇಗೌಡ ಏರ್‌ಪೋರ್ಟ್ ನಲ್ಲಿ ಆಮೆಗಳ ಕಳ್ಳಸಾಗಾಟ, ವಿದೇಶದಿಂದ ಬೆಂಗಳೂರಿಗೆ ಬಂದ ಅಳಿವಿನಂಚಿನಲ್ಲಿರುವ ಆಮೆಗಳು!]]></title>
            <link>https://kannada.asianetnews.com/karnataka-districts/bengaluru-airport-47-turtles-seized-from-passenger-from-bangkok-arrested-in-wildlife-smuggling-case-gdp/articleshow-lcl8k6r</link>
            <guid isPermaLink="true">https://kannada.asianetnews.com/karnataka-districts/bengaluru-airport-47-turtles-seized-from-passenger-from-bangkok-arrested-in-wildlife-smuggling-case-gdp/articleshow-lcl8k6r</guid>
            <pubDate>Sat, 16 May 2026 16:47:25 +0530</pubDate>
            <description><![CDATA[ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬ್ಯಾಂಕಾಕ್&zwnj;ನಿಂದ ಬಂದ ಪ್ರಯಾಣಿಕನಿಂದ 47 ಜೀವಂತ ಆಮೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಪ್ರಾಣಿಗಳಲ್ಲಿ ಅಳಿವಿನಂಚಿನಲ್ಲಿರುವ ಪ್ರಭೇದಗಳು ಸೇರಿದ್ದು, ವನ್ಯಜೀವಿ ಕಳ್ಳಸಾಗಾಣಿಕೆ ಜಾಲದ ಭಾಗವಾಗಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krr7xh8wf3df0t0jceqz1pxn,imgname-bengaluru-airport-turtle-smuggling--1--1778930074908.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ವಿದೇಶದಿಂದ ಕಳ್ಳ ಸಾಗಾಣಿಕೆ ಮಾಡಲಾಗುತ್ತಿದ್ದ 47 ಜೀವಂತ ಆಮೆಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಈ ಸಂಬಂಧ ಬ್ಯಾಕಾಂಕ್&zwnj;ನಿಂದ ಬಂದಿಳಿದ ಪ್ರಯಾಣಿಕನನ್ನು ಬಂಧಿಸಲಾಗಿದೆ.&lt;/p&gt;&lt;p&gt;ವರದಿ ಪ್ರಕಾರ, ಕಸ್ಟಮ್ಸ್ ಅಧಿಕಾರಿಗಳು ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ವೇಳೆ ವಿವಿಧ ಜಾತಿಯ ಆಮೆಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಪ್ರಾಣಿಗಳಲ್ಲಿ ರೆಡ್ ಫೂಟೆಡ್ ಆಮೆ, ಆಫ್ರಿಕನ್ ಸ್ಪರ್&zwnj;ಡ್ ಆಮೆ, ಅರ್ಜೆಂಟೀನಾದ ಕಪ್ಪು-ಬಿಳಿ ಟೆಗು ಹಾಗೂ ಗೋಯಲ್ಡಿಯ ಮಾರ್ಮೊಸೆಟ್ ಸೇರಿದಂತೆ ಅಪರೂಪದ ಜಾತಿಗಳು ಸೇರಿವೆ.&lt;/p&gt;&lt;h2&gt;ಕಳ್ಳ ಸಾಗಾಣಿಕೆ ದಂಧೆ&lt;/h2&gt;&lt;p&gt;ಈ ಪ್ರಾಣಿಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸಲಾಗುತ್ತಿದ್ದು, ಕಳ್ಳ ಸಾಗಾಣಿಕೆ ದಂಧೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೆಲವರು ಆಮೆಗಳು ಅದೃಷ್ಟ ತರಲಿವೆ ಎಂಬ ನಂಬಿಕೆಯನ್ನು ಬಳಸಿಕೊಂಡು ಜನರಿಗೆ ಮಾರಾಟ ಮಾಡುವುದರಿಂದ ಇಂತಹ ಅಕ್ರಮ ದಂಧೆಗಳು ಹೆಚ್ಚಾಗುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h2&gt;ಅಳಿವಿನಂಚಿನಲ್ಲಿರುವ ಅಮೆಗಳೂ ಸೇರಿವೆ&lt;/h2&gt;&lt;p&gt;ವಶಪಡಿಸಿಕೊಂಡ ಕೆಲವು ಪ್ರಭೇದಗಳು ಅಳಿವಿನಂಚಿನಲ್ಲಿರುವ ಜೀವಿಗಳ ಪಟ್ಟಿಯಲ್ಲಿ ಸೇರಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂರಕ್ಷಣೆಗೊಳಪಡಿಸಿರುವ &ldquo;CITES&rdquo; (Convention on International Trade in Endangered Species) ಅನುಬಂಧ-II ಅಡಿಯಲ್ಲಿ ಪಟ್ಟಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.&lt;/p&gt;&lt;p&gt;ಈ ಪ್ರಕರಣದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಕಾಯ್ದೆ 1962ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬಂಧಿತ ಪ್ರಯಾಣಿಕನನ್ನು ಮುಂದಿನ ಕ್ರಮಕ್ಕಾಗಿ ವನ್ಯಜೀವಿ (ರಕ್ಷಣೆ) ಕಾಯ್ದೆ 1972ರಡಿ ಬೆಂಗಳೂರು ಗ್ರಾಮಾಂತರ ವಲಯದ ಅರಣ್ಯಾಧಿಕಾರಿ (RFO) ಅವರಿಗೆ ಹಸ್ತಾಂತರಿಸಲಾಗಿದೆ.&lt;/p&gt;&lt;p&gt;ಈ ಕಾರ್ಯಾಚರಣೆಯ ಮೂಲಕ ಮತ್ತೊಂದು ದೊಡ್ಡ ಮಟ್ಟದ ವನ್ಯಜೀವಿ ಕಳ್ಳ ಸಾಗಾಣಿಕೆ ಯತ್ನವನ್ನು ವಿಫಲಗೊಳಿಸಿದ ಕಸ್ಟಮ್ಸ್ ಅಧಿಕಾರಿಗಳು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-airport-47-turtles-seized-from-passenger-from-bangkok-arrested-in-wildlife-smuggling-case-gdp/articleshow-lcl8k6r"/>
        </item>
        <item>
            <title><![CDATA[ಶಿವಂ ಅಸೋಸಿಯೇಟ್ 4500 ಕೋಟಿ ವಂಚನೆ: ಲಾಭ ಪಡೆದವರಿಗೆ ಈಗ ತನಿಖೆಯ ಬಿಸಿ, 1 ರೂ ಹೆಚ್ಚಿಗೆ ಪಡೆದ್ರೂ ಸಂಕಷ್ಟ!]]></title>
            <link>https://kannada.asianetnews.com/karnataka-districts/shivanand-neelannavar-shivam-associates-scam-cid-targets-profited-investors-to-recover-rs2125-crore-gdp/articleshow-pt0kub3</link>
            <guid isPermaLink="true">https://kannada.asianetnews.com/karnataka-districts/shivanand-neelannavar-shivam-associates-scam-cid-targets-profited-investors-to-recover-rs2125-crore-gdp/articleshow-pt0kub3</guid>
            <pubDate>Fri, 22 May 2026 13:40:44 +0530</pubDate>
            <description><![CDATA[ಬೆಳಗಾವಿಯ ಶಿವಂ ಅಸೋಸಿಯೇಟ್ ಹೂಡಿಕೆ ವಂಚನೆ ಪ್ರಕರಣದ ತನಿಖೆಯು ಹೊಸ ತಿರುವು ಪಡೆದುಕೊಂಡಿದ್ದು, ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆರೋಪಿ ಶಿವಾನಂದ ನೀಲಣ್ಣವರ, ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡಿರುವುದಾಗಿ ಒಪ್ಪಿಕೊಂಡಿದ್ದು, ಈ ಬೆಳವಣಿಗೆಯು ಲಾಭ ಪಡೆದ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krq4yxgfzrpnf4gbcr9vfdmm,imgname-----------------------2026-05-16t063327.134-1778893420047.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ: ಶಿವಂ ಅಸೋಸಿಯೇಟ್ 4500 ರೂ ಬಹುಕೋಟಿ ಹೂಡಿಕೆ ವಂಚನೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಹೂಡಿಕೆ ಮಾಡಿದ ಹಣಕ್ಕಿಂತ ಹೆಚ್ಚಿನ ಲಾಭ ಪಡೆದ ಹೂಡಿಕೆದಾರರಿಗೂ ಅಧಿಕಾರಿಗಳ ತನಿಖೆ ಬಿಸಿ ತಟ್ಟಿದೆ.&lt;/p&gt;&lt;p&gt;ಆರೋಪಿ ಶಿವಾನಂದ ನೀಲಣ್ಣವರ ಹೂಡಿಕೆದಾರರನ್ನು ಆಕರ್ಷಿಸಲು ಸಿದ್ಧಪಡಿಸಿದ್ದ &lsquo;ಅಕ್ಯೂಮನ್ ಆ್ಯಪ್&rsquo;ನಲ್ಲಿನ ಹೂಡಿಕೆ ಮತ್ತು ಸಂದಾಯದ ಸಂಪೂರ್ಣ ಶೀಟ್ ಪರಿಶೀಲನೆ ಕಾರ್ಯವನ್ನು ತನಿಖಾಧಿಕಾರಿಗಳು ಚುರುಕುಗೊಳಿಸಿದ್ದಾರೆ. ಯಾವ ಹೂಡಿಕೆದಾರರು ಎಷ್ಟು ಹಣ ಹಾಕಿದರು, ಎಷ್ಟು ಲಾಭ ಪಡೆದರು ಎಂಬ ಸಂಪೂರ್ಣ ಮಾಹಿತಿ ಆ್ಯಪ್&zwnj;ನಿಂದ ಹೊರಬರುತ್ತಿದೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;h2&gt;ಹೆಚ್ಚು ಹಣ ವಾಪಸ್ ಪಡೆದಿರುವವರ ಮಾಹಿತಿ&lt;/h2&gt;&lt;p&gt;ಹೂಡಿಕೆ ಮಾಡಿದ ಮೂಲ ಮೊತ್ತಕ್ಕಿಂತ ಒಂದು ರೂಪಾಯಿ ಹೆಚ್ಚು ಹಣ ವಾಪಸ್ ಪಡೆದಿರುವ ಎಲ್ಲಾ ಹೂಡಿಕೆದಾರರ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಂತಹವರಿಂದ ಹೆಚ್ಚುವರಿ ಹಣ ವಸೂಲಿ ಮಾಡಿ, ನಷ್ಟ ಅನುಭವಿಸಿದ ಮೂಲ ಹೂಡಿಕೆದಾರರಿಗೆ ಮರಳಿ ಹಂಚುವ ಕಾರ್ಯತಂತ್ರವನ್ನು ಅಧಿಕಾರಿಗಳು ರೂಪಿಸಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ತನಿಖಾಧಿಕಾರಿಗಳ ಎದುರು ಶಿವಾನಂದ ನೀಲಣ್ಣವರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೂಡಿಕೆದಾರರಿಂದ ಸಂಗ್ರಹಿಸಿದ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಭಾರಿ ನಷ್ಟ ಅನುಭವಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲೂ ಹಣ ತೊಡಗಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.&lt;/p&gt;&lt;h2&gt;35 ಸಾವಿರ ಜನರಿಂದ ₹2125 ಕೋಟಿ ಹೂಡಿಕೆ ಸಂಗ್ರಹ&lt;/h2&gt;&lt;p&gt;ಹಗರಣ ₹4500 ಕೋಟಿ ಎಂದು ಇದುವರೆಗೆ ಚರ್ಚೆಯಾಗುತ್ತಿತ್ತು. ಆದರೆ ತನಿಖೆಯಿಂದ ಸುಮಾರು 35 ಸಾವಿರ ಜನರಿಂದ ₹2125 ಕೋಟಿ ಹೂಡಿಕೆ ಸಂಗ್ರಹವಾಗಿರುವುದು ಮಾತ್ರ ಸಾಬೀತಾಗಿದೆ. ಯಾವ ಪ್ರದೇಶದಲ್ಲಿ ಜಾಗ, ಜಮೀನು ಖರೀದಿಸಲಾಗಿದೆ ಎಂಬ ಆಸ್ತಿಗಳ ಜಾಡು ಹುಡುಕುವ ಕಾರ್ಯವೂ ಅಧಿಕಾರಿಗಳಿಂದ ಈಗ ಜೋರಾಗಿದೆ. ಅಕ್ಯೂಮನ್ ಆ್ಯಪ್ ಡೇಟಾ ಆಧಾರದ ಮೇಲೆ &lsquo;ಲಾಭ ಪಡೆದವರ ಪಟ್ಟಿ&rsquo; ತಯಾರಿಸಲಾಗುತ್ತಿದೆ. ಅವರಿಂದ ವಸೂಲಿ ಮಾಡಿದ ಹಣವನ್ನು ಸಂತ್ರಸ್ತ ಹೂಡಿಕೆದಾರರಿಗೆ ವಿತರಿಸುವ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಬೆಳವಣಿಗೆಯಿಂದ ಲಾಭದ ಆಸೆಗೆ ಶಿವಂ ಅಸೋಶಿಯೇಟ್&zwnj;ನಲ್ಲಿ ಹೂಡಿಕೆ ಮಾಡಿದ್ದವರಲ್ಲಿ ಆತಂಕ ಮನೆಮಾಡಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/shivanand-neelannavar-shivam-associates-scam-cid-targets-profited-investors-to-recover-rs2125-crore-gdp/articleshow-pt0kub3"/>
        </item>
        <item>
            <title><![CDATA[ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಹಾಕಲು 11 ಹೊಸ ಫ್ಲೈಓವರ್; ₹3,055 ಕೋಟಿ ಮೆಗಾ ಪ್ಲ್ಯಾನ್!]]></title>
            <link>https://kannada.asianetnews.com/karnataka-districts/bengaluru-traffic-ease-b-smile-proposes-11-new-flyovers-worth-rs3055-crore-across-key-junctions-gdp/articleshow-q3i416k</link>
            <guid isPermaLink="true">https://kannada.asianetnews.com/karnataka-districts/bengaluru-traffic-ease-b-smile-proposes-11-new-flyovers-worth-rs3055-crore-across-key-junctions-gdp/articleshow-q3i416k</guid>
            <pubDate>Fri, 22 May 2026 17:14:33 +0530</pubDate>
            <description><![CDATA[ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಿಸಲು, ಬೆಂಗಳೂರು ಸ್ಮಾರ್ಟ್ ಇನ್&zwnj;ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮ್ಲೈಲ್) 3,055 ಕೋಟಿ ರು. ವೆಚ್ಚದಲ್ಲಿ 11 ಹೊಸ ಫ್ಲೈಓವರ್&zwnj;ಗಳನ್ನು ನಿರ್ಮಿಸಲು ಮುಂದಾಗಿದೆ. ನಗರದ ಕೇಂದ್ರ ಭಾಗ, ಮೈಸೂರು ರಸ್ತೆ, ಯಲಹಂಕ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಈ ಮೇಲ್ಸೇತುವೆಗಳು ನಿರ್ಮಾಣಗೊಳ್ಳಲಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01etw552hqdhevw4rh3164trf2,imgname-flyovers-in-hyderabad-6f-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಸಂಚಾರ ದಟ್ಟಣೆ ನಿವಾರಣೆಗಾಗಿ 3,055 ಕೋಟಿ ರು. ವೆಚ್ಚದಲ್ಲಿ ನಗರದಲ್ಲಿ 11 ಹೊಸ ಫ್ಲೈಓವರ್&zwnj;ಗಳ (ಮೇಲ್ಸೇತುವೆ) ನಿರ್ಮಾಣಕ್ಕೆ ಬೆಂಗಳೂರು ಸ್ಮಾರ್ಟ್ ಇನ್&zwnj;ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮ್ಲೈಲ್) ಮುಂದಾಗಿದೆ. ನಗರದ ಕೇಂದ್ರ ಭಾಗದಲ್ಲಿನ ಜಂಕ್ಷನ್&zwnj;ಗಳು, ವೃತ್ತಗಳು, ಪ್ರಮುಖ ರಸ್ತೆಗಳಲ್ಲಿ ಫ್ಲೈಓವರ್&zwnj;ಗಳು ತಲೆ ಎತ್ತಲಿವೆ. ಟೆಂಡರ್ ಅಂತಿಮಗೊಂಡು ಕಾಮಗಾರಿಗೆ ಚಾಲನೆ ನೀಡಿದ ಬಳಿಕ 18 ತಿಂಗಳಲ್ಲಿ ಕಾಮಗಾರಿ ಮುಗಿಸುವ ಗಡುವು ನೀಡಲಾಗಿದೆ. ಈ ಕಾಮಗಾರಿ ಅವಧಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.&lt;/p&gt;&lt;h2&gt;ಎಲ್ಲೆಲ್ಲಿ ಫ್ಲೈಓವರ್&zwnj;ಗಳು&lt;/h2&gt;&lt;p&gt;ನಗರದ ಕೇಂದ್ರ ಭಾಗದಲ್ಲಿ ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದವರೆಗೆ, ಮೈಸೂರು ರಸ್ತೆಯಲ್ಲಿ ಬಾಲ ಗಂಗಾಧರನಾಥ ಫ್ಲೈಓವರ್&zwnj;ನಿಂದ ಟೌನ್&zwnj;ಹಾಲ್&zwnj;ವರೆಗೆ ಲೂಪ್ ಮೇಲ್ಸೇತುವೆ ಹಾಗೂ ಆನಂದರಾವ್ ಸರ್ಕಲ್ ಫ್ಲೈಓವರ್&zwnj;ನಿಂದ ನೃಪತುಂಗ ರಸ್ತೆವರೆಗೆ (ಕೆ.ಆರ್.ವೃತ್ತದ ಬಳಿ) ನೂತನ ಮೇಲ್ಸೇತುವೆ ನಿರ್ಮಿಸಲಾಗುತ್ತದೆ. ಒಟ್ಟು 7 ಕಿ.ಮೀ ಉದ್ದದ ಮೂರು ಫ್ಲೈಓವರ್&zwnj;ಗಳ ನಿರ್ಮಾಣಕ್ಕೆ 557 ಕೋಟಿ ರು. ವೆಚ್ಚವಾಗುವ ಅಂದಾಜು ಮಾಡಲಾಗಿದೆ.&lt;/p&gt;&lt;p&gt;ಅದೇ ರೀತಿ ಹಳೇ ಮದ್ರಾಸ್ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್&zwnj;ವರೆಗೆ 5.2 ಕಿ.ಮೀ. ಉದ್ದದ ಫ್ಲೈಓವರ್&zwnj;ಗೆ 852 ಕೋಟಿ ರು., ಶೋಲೆ ಸರ್ಕಲ್&zwnj;ನಿಂದ ಸೆಂಟ್ ಜಾನ್ ಆಸ್ಪತ್ರೆ ರಸ್ತೆಯವರೆಗೆ 5.3 ಕಿ.ಮೀ ಉದ್ದದ ಫ್ಲೈಓವರ್&zwnj;ಗೆ 519 ಕೋಟಿ ರು. ಹಾಗೂ ಯಲಹಂಕ ದೊಡ್ಡಬಳ್ಳಾಪುರ ರಸ್ತೆಯ ಪೊಲೀಸ್ ಸ್ಟೇಷನ್ ಜಂಕ್ಷನ್&zwnj;ನಿಂದ ಕೋಗಿಲು ಸರ್ಕಲ್&zwnj;ವರೆಗೆ 103 ಕೋಟಿ ರು. ವೆಚ್ಚದಲ್ಲಿ 1.50 ಕಿ.ಮೀ ಉದ್ದದ ಫ್ಲೈಓವರ್ ನಿರ್ಮಾಣವಾಗಲಿದೆ.&lt;/p&gt;&lt;p&gt;ಮೈಸೂರು ರಸ್ತೆಯಲ್ಲಿ ಸಿರ್ಸಿ ಸರ್ಕಲ್&zwnj;ನಿಂದ ನಾಯಂಡಹಳ್ಳಿವರೆಗೆ 538 ಕೋಟಿ ರು. ವೆಚ್ಚದಲ್ಲಿ 5.20 ಕಿ.ಮೀ ಫ್ಲೈಓವರ್, ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್&zwnj;ನಲ್ಲಿ 77 ಕೋಟಿ ರು. ವೆಚ್ಚದಲ್ಲಿ 1.50 ಕಿ.ಮೀ, ರಘುವನಹಳ್ಳಿ ಕ್ರಾಸ್ ಬಳಿ 42 ಕೋಟಿ ರು. ವೆಚ್ಚದಲ್ಲಿ 900 ಮೀಟರ್ ಫ್ಲೈಓವರ್, ಮಹಾಲಕ್ಷ್ಮೀ ಲೇಔಟ್&zwnj;ನ ವೆಸ್ಟ್ ಆಫ್ ಕಾರ್ಡ್ ರಸ್ತೆಯಿಂದ ರಿಂಗ್ ರಸ್ತೆವರೆಗಿನ ಪೈಪ್&zwnj;ಲೈನ್ ರಸ್ತೆಯಲ್ಲಿ 327 ಕೋಟಿ ರು. ವೆಚ್ಚದಲ್ಲಿ 2 ಕಿ.ಮೀ ಫ್ಲೈಓವರ್ ಹಾಗೂ ತುಮಕೂರು ರಸ್ತೆಯ ಆರ್&zwnj;ಎನ್&zwnj;ಎಸ್ ಶಾಂತಿನಿಕೇತನ ಎದುರಿನ ಎಂಇಐ ಜಂಕ್ಷನ್&zwnj;ನಲ್ಲಿ 40 ಕೋಟಿ ರು. ವೆಚ್ಚದಲ್ಲಿ ಅರ್ಧ ಕಿ.ಮೀ ಉದ್ದದ ಫ್ಲೈಓವರ್&zwnj; ನಿರ್ಮಿಸಲಾಗುತ್ತದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-traffic-ease-b-smile-proposes-11-new-flyovers-worth-rs3055-crore-across-key-junctions-gdp/articleshow-q3i416k"/>
        </item>
        <item>
            <title><![CDATA[ಬೆಂಗಳೂರು ಸಬರ್ಬನ್ ರೈಲು  4 ಕಾರಿಡಾರ್ ಯೋಜನೆ,  ನಗರದಲ್ಲಿ ಇನ್ನು ಲೆವೆಲ್ ಕ್ರಾಸಿಂಗ್ ಇರಲ್ಲ: ಅಶ್ವಿನಿ ವೈಷ್ಣವ್‌]]></title>
            <link>https://kannada.asianetnews.com/gallery/karnataka-districts/bengaluru-to-get-major-rail-connectivity-boost-under-suburban-project-and-no-level-crossings-in-two-years-gdp-q9iqsdp</link>
            <guid isPermaLink="true">https://kannada.asianetnews.com/gallery/karnataka-districts/bengaluru-to-get-major-rail-connectivity-boost-under-suburban-project-and-no-level-crossings-in-two-years-gdp-q9iqsdp</guid>
            <pubDate>Mon, 18 May 2026 14:30:06 +0530</pubDate>
            <description><![CDATA[ಬೆಂಗಳೂರಿನಾದ್ಯಂತ ರೈಲು ಸಂಪರ್ಕವನ್ನು ಸುಧಾರಿಸಲು 4 ಕಾರಿಡಾರ್ ಯೋಜನೆಗಳು ಪ್ರಗತಿಯಲ್ಲಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಭೂಸ್ವಾಧೀನ, ನಿಲ್ದಾಣ ನಿರ್ಮಾಣ, ವಿದ್ಯುದೀಕರಣ ಮತ್ತು ಲೆವೆಲ್ ಕ್ರಾಸಿಂಗ್&zwnj;ಗಳನ್ನು ತೆಗೆದುಹಾಕುವಂತಹ ಪ್ರಮುಖ ಕಾಮಗಾರಿಗಳು ವೇಗವಾಗಿ ಸಾಗುತ್ತಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krx3xrtvbk7aved3x7v2cp7q,imgname-karnataka-railway-project-1779093660507.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರಿನಾದ್ಯಂತ ರೈಲು ಸಂಪರ್ಕವನ್ನು ಸುಧಾರಿಸಲು 4 ಕಾರಿಡಾರ್ ಯೋಜನೆಗಳು ಪ್ರಗತಿಯಲ್ಲಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಭೂಸ್ವಾಧೀನ, ನಿಲ್ದಾಣ ನಿರ್ಮಾಣ, ವಿದ್ಯುದೀಕರಣ ಮತ್ತು ಲೆವೆಲ್ ಕ್ರಾಸಿಂಗ್&zwnj;ಗಳನ್ನು ತೆಗೆದುಹಾಕುವಂತಹ ಪ್ರಮುಖ ಕಾಮಗಾರಿಗಳು ವೇಗವಾಗಿ ಸಾಗುತ್ತಿವೆ.&lt;img&gt;&lt;p&gt;ಬೆಂಗಳೂರು: ನಗರಾದ್ಯಂತ ರೈಲು ಸಂಪರ್ಕ ಕಲ್ಪಿಸುವ ಉದ್ದೇಶದಿಂದ 4 ಕಾರಿಡಾರ್ ಯೋಜನೆಗಳನ್ನು ರೂಪಿಸಲಾಗಿದ್ದು, ಪ್ರಗತಿಯಲ್ಲಿವೆ&zwnj; ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಬೆಂಗಳೂರು ಎಸ್ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್&zwnj; ನಡುವೆ ನೂತನ ದ್ವಿಸಾಪ್ತಾಹಿಕ ರೈಲಿಗೆ ಭಾನುವಾರ ವರ್ಚುವಲ್&zwnj; ವಿಧಾನದ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.&lt;/p&gt;&lt;img&gt;&lt;p&gt;ಬೈಯಪ್ಪನಹಳ್ಳಿ- ಚಿಕ್ಕಬಾಣಾವರ ಮತ್ತು ಹೀಲಲಿಗೆ-ರಾಜಾನುಕುಂಟೆ ಕಾರಿಡಾರ್&zwnj;ಗಳಿಗೆ ಭೂಸ್ವಾಧೀನ ಪೂರ್ಣಗೊಂಡಿದ್ದು, ನಿಲ್ದಾಣದ ಕೆಲಸ ನಡೆಯುತ್ತಿದೆ. ಕೆಎಸ್ಆರ್ ಬೆಂಗಳೂರು- ದೇವನಹಳ್ಳಿ ಕಾರಿಡಾರ್&zwnj; ವಿನ್ಯಾಸವನ್ನು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ಅನುಮೋದಿಸಿ, ಭೂತಾಂತ್ರಿಕ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಕೆಂಗೇರಿ- ವೈಟ್&zwnj;ಫೀಲ್ಡ್ ಕಾರಿಡಾರ್&zwnj; ಯೋಜನೆಯನ್ನು ಇತ್ತೀಚೆಗೆ ಅನುಮೋದಿಸಲಾಗಿದ್ದು, ಶೀಘ್ರ ಸರ್ವೇ ಕಾರ್ಯ ಆರಂಭವಾಗಲಿದೆ ಎಂದರು.&lt;/p&gt;&lt;img&gt;&lt;p&gt;ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಾತನಾಡಿ, ಕಳೆದ 14 ವರ್ಷಗಳಲ್ಲಿ ರಾಜ್ಯದಲ್ಲಿ 3840 ಕಿ.ಮೀ. ಉದ್ದದ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಶೇ.97ರಷ್ಟು (3747 ಕಿ.ಮೀ.) ಮುಗಿದಿದೆ. 707ರಷ್ಟು ರೈಲ್ವೆ ಮೇಲ್ಸೇತುವೆ, ಕೆಳಸೇತುವೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ಒಂದು ವರ್ಷದೊಳಗೆ ಇನ್ನೂ 146 ಕಾಮಗಾರಿಗಳು ಪೂರ್ಣಗೊಳ್ಳಲಿವೆ. 2,160 ಕೋಟಿ ರು. ವೆಚ್ಚದಲ್ಲಿ 62 ರೈಲು ನಿಲ್ದಾಣಗಳ ಅಭಿವೃದ್ಧಿ ಕೆಲಸ ನಡೆಯುತ್ತಿದೆ ಎಂದು ಹೇಳಿದರು.&amp;nbsp;&lt;/p&gt;&lt;img&gt;&lt;p&gt;ಮುಂದಿನ ಮೂರು ವರ್ಷಗಳಲ್ಲಿ ರೈಲ್ವೆ ಲೆವೆಲ್&zwnj; ಕ್ರಾಸಿಂಗ್ ಇರಬಾರದೆಂಬ ಪ್ರಧಾನಿ ಮೋದಿ ಸೂಚನೆಯಂತೆ ಕಾರ್ಯೋನ್ಮುಖರಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೆರಡು ವರ್ಷಗಳಲ್ಲಿ ಯಾವುದೇ ಲೆವೆಲ್&zwnj; ಕ್ರಾಸಿಂಗ್&zwnj; ಇರಲ್ಲ. ಪ್ರಸ್ತುತ 47 ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಳಿದೆಡೆ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ವಿ.ಸೋಮಣ್ಣ ತಿಳಿಸಿದರು.&lt;/p&gt;&lt;img&gt;&lt;p&gt;ಬೆಂಗಳೂರು ಸೆಂಟ್ರಲ್&zwnj; ಸಂಸದ ಪಿ.ಸಿ. ಮೋಹನ್, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್ ಸಿರೋಯಾ ಇದ್ದರು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಇದ್ದರು.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bengaluru-to-get-major-rail-connectivity-boost-under-suburban-project-and-no-level-crossings-in-two-years-gdp-q9iqsdp"/>
        </item>
        <item>
            <title><![CDATA[ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚಾಲೆಂಜರ್ 2026 ಭರ್ಜರಿ ತಾಲೀಮು,  3000 ಸಿಬ್ಬಂದಿಗಳಿಂದ ತುರ್ತು ಕಾರ್ಯಾಚರಣೆ]]></title>
            <link>https://kannada.asianetnews.com/gallery/karnataka-districts/bengaluru-airport-conducts-its-largest-ever-emergency-response-drill-using-ai-technology-gdp-tpoupuw</link>
            <guid isPermaLink="true">https://kannada.asianetnews.com/gallery/karnataka-districts/bengaluru-airport-conducts-its-largest-ever-emergency-response-drill-using-ai-technology-gdp-tpoupuw</guid>
            <pubDate>Thu, 21 May 2026 16:36:49 +0530</pubDate>
            <description><![CDATA[&lt;p&gt;ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಬೃಹತ್ ತುರ್ತು ಪರಿಸ್ಥಿತಿ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. 3,000ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದ ಈ ತಾಲೀಮಿನಲ್ಲಿ, ವಿಮಾನ ಅಪಘಾತದ ಸನ್ನಿವೇಶವನ್ನು ಸೃಷ್ಟಿಸಲಾಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks52hjgs5h9rfyg05jcn1494,imgname-bengaluru-airport-emergency-drill--3--1779360647705.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಬೃಹತ್ ತುರ್ತು ಪರಿಸ್ಥಿತಿ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. 3,000ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದ ಈ ತಾಲೀಮಿನಲ್ಲಿ, ವಿಮಾನ ಅಪಘಾತದ ಸನ್ನಿವೇಶವನ್ನು ಸೃಷ್ಟಿಸಲಾಯಿತು.&lt;/p&gt;&lt;img&gt;&lt;p&gt;ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ದಿಢೀರ್ ಅಂತ ಏನಾದರೂ ಅವಘಡ ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಪ್ರಯಾಣಿಕರ ಪ್ರಾಣ ರಕ್ಷಣೆ ಹೇಗೆ ಮಾಡಬೇಕು? ಇಂತಹ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಲು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಡಿಜಿಸಿಎ ಮತ್ತು ಐಸಿಎಒ ಮಾರ್ಗಸೂಚಿಗಳ ಅನ್ವಯ, ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಪೂರ್ಣ ಪ್ರಮಾಣದ ತಾಲೀಮು, ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಬಿಕ್ಕಟ್ಟು ನಿರ್ವಹಣೆಯ ಬದ್ಧತೆಯನ್ನು ಮತ್ತೊಮ್ಮೆ ತೋರಿಸಿದೆ.&lt;/p&gt;&lt;img&gt;&lt;p&gt;ಇದು ಕೆಂಪೇಗೌಡ ವಿಮಾನ ನಿಲ್ದಾಣದ ಇತಿಹಾಸದಲ್ಲಿ ನಡೆದ ಅತಿದೊಡ್ಡ ತುರ್ತು ಪರಿಸ್ಥಿತಿ ಅಭ್ಯಾಸವಾಗಿದೆ. ಈ ತಾಲೀಮಿನಲ್ಲಿ ವಿಮಾನಯಾನ ಸಂಸ್ಥೆಗಳು, ರಾಜ್ಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆಸ್ಪತ್ರೆಗಳು, ಭಾರತೀಯ ವಾಯುಪಡೆ, ಸೇನಾ ಹಾಗೂ ಅರೆಸೇನಾ ಪಡೆಗಳು, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸೇರಿದಂತೆ ಬರೋಬ್ಬರಿ 100ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 3,000ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು.&lt;/p&gt;&lt;img&gt;&lt;p&gt;ಈ ಅಭ್ಯಾಸದಲ್ಲಿ ವಿಮಾನ ಅಪಘಾತದಂತಹ ಸಂಕೀರ್ಣ ಸನ್ನಿವೇಶವನ್ನು ಸೃಷ್ಟಿಸಲಾಗಿತ್ತು. ತಕ್ಷಣವೇ ಅಲರ್ಟ್ ಸಿಸ್ಟಮ್ ಆನ್ ಮಾಡುವುದು, ಅಗ್ನಿಶಾಮಕ ದಳದ ಆಗಮನ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ, ಮತ್ತು ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲು ಜೀರೋ-ಟ್ರಾಫಿಕ್ 'ಗ್ರೀನ್ ಕಾರಿಡಾರ್' ವ್ಯವಸ್ಥೆ ಮಾಡುವುದು... ಹೀಗೆ ಪ್ರತಿಯೊಂದು ಹಂತವನ್ನೂ ಅಚ್ಚುಕಟ್ಟಾಗಿ ಪರೀಕ್ಷಿಸಲಾಯಿತು. ವಿಶೇಷವಾಗಿ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಏರ್-ಲಿಫ್ಟ್ ಮಾಡುವ ತಾಲೀಮು ಎಲ್ಲರ ಗಮನ ಸೆಳೆಯಿತು.&lt;/p&gt;&lt;img&gt;&lt;p&gt;ಈ ಬಾರಿಯ 'ಚಾಲೆಂಜರ್ 2026' ತಾಲೀಮಿನ ಅತಿ ದೊಡ್ಡ ಸವಾಲು ಎಂದರೆ, ವಿಮಾನ ನಿಲ್ದಾಣದ ಎರಡನೇ ರನ್&zwnj;ವೇಯಲ್ಲಿ ನೈಜ ವಿಮಾನಗಳ ಹಾರಾಟ ನಡೆಯುತ್ತಿದ್ದಾಗಲೇ ಈ ಅಣಕು ಪ್ರದರ್ಶನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದು! ಇದು ವಿವಿಧ ಸಂಸ್ಥೆಗಳ ನಡುವಿನ ನಿಖರವಾದ ಸಂವಹನ ಮತ್ತು ಸಮಯಪಾಲನೆಯನ್ನು ಸಾಬೀತುಪಡಿಸಿತು. ಜೊತೆಗೆ, ರಕ್ಷಣಾ ಕಾರ್ಯಾಚರಣೆ ನಡೆಸುವ ತಂಡಗಳಿಗೆ ತ್ವರಿತವಾಗಿ ಮಾರ್ಗದರ್ಶನ ನೀಡಲು ಇದೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಟೂಲ್&zwnj;ಗಳನ್ನು ಬಳಸಲಾಯಿತು. ಘಟನೆಯ ಕ್ಷಣಕ್ಷಣದ ಮಾಹಿತಿಯನ್ನು ರಿಯಲ್-ಟೈಮ್&zwnj;ನಲ್ಲಿ ಟ್ರ್ಯಾಕ್ ಮಾಡಲು ಹೊಸ ಡಿಜಿಟಲ್ ವೇದಿಕೆಯನ್ನು ಅಳವಡಿಸಲಾಗಿತ್ತು.&lt;/p&gt;&lt;img&gt;&lt;p&gt;ಈ ಯಶಸ್ವಿ ಅಭ್ಯಾಸದ ಬಗ್ಗೆ ಮಾತನಾಡಿದ ಬಿಐಎಎಲ್ ಎಂಡಿ ಹಾಗೂ ಸಿಇಒ ಹರಿ ಮರಾರ್, &quot;ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ದಿನೇ ದಿನೇ ವಿಸ್ತಾರವಾಗುತ್ತಿವೆ. ಹಾಗಾಗಿ, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ನಾವು ಸದಾ ಸಿದ್ಧರಾಗಿರಬೇಕು. ಸಂಸ್ಥೆಗಳ ನಡುವಿನ ಸಮನ್ವಯ ಮತ್ತು ಚುರುಕುತನವನ್ನು ಪರೀಕ್ಷಿಸಲು ಈ ಅಭ್ಯಾಸವನ್ನು ರೂಪಿಸಲಾಗಿತ್ತು. ವಿಮಾನಗಳ ಓಡಾಟದ ನಡುವೆಯೇ ಈ ತಾಲೀಮನ್ನು ಯಶಸ್ವಿಯಾಗಿ ಮುಗಿಸಿದ್ದು ನಮ್ಮ ಸುರಕ್ಷತಾ ವ್ಯವಸ್ಥೆಯ ಸಾಮರ್ಥ್ಯವನ್ನು ತೋರಿಸುತ್ತದೆ,&quot; ಎಂದು ಹರ್ಷ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;ಬೆಂಗಳೂರು ವಿಮಾನ ನಿಲ್ದಾಣವು ದಕ್ಷಿಣ ಭಾರತದ ಅತಿ ದೊಡ್ಡ ಹಾಗೂ ದೇಶದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದೆ. 2025-26ನೇ ಆರ್ಥಿಕ ವರ್ಷದಲ್ಲಿ 4.44 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿರುವ ಇದು, 2026ರ ಏಪ್ರಿಲ್ ವೇಳೆಗೆ ಒಟ್ಟು 40 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿದ ಮೈಲಿಗಲ್ಲನ್ನು ತಲುಪಿದೆ. ಸರಕು ಸಾಗಣೆಯಲ್ಲಿಯೂ, ಅದರಲ್ಲೂ ವಿಶೇಷವಾಗಿ ಬೇಗನೆ ಹಾಳಾಗುವ ವಸ್ತುಗಳ ಸಾಗಣೆಯಲ್ಲಿ ಸತತ ಐದನೇ ವರ್ಷವೂ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/bengaluru-airport-conducts-its-largest-ever-emergency-response-drill-using-ai-technology-gdp-tpoupuw"/>
        </item>
        <item>
            <title><![CDATA[ರಾಜ್ಯದ ಆ ಒಂದು ಯೋಜನೆ ಅನುಷ್ಠಾನಕ್ಕೆ ಮುನ್ನವೇ ಕನಕಪುರ-ನೆಲಮಂಗಲ ಸುತ್ತಮುತ್ತ ಭೂಮಿ ಬೆಲೆ ಗಗನಕ್ಕೆ, ಹೂಡಿಕೆ ಹೆಚ್ಚಳ!]]></title>
            <link>https://kannada.asianetnews.com/karnataka-districts/bengaluru-second-airport-buzz-triggers-land-price-hike-south-andwest-corridors-kanakapura-and-nelamangala-see-spike-gdp/articleshow-vxi5ows</link>
            <guid isPermaLink="true">https://kannada.asianetnews.com/karnataka-districts/bengaluru-second-airport-buzz-triggers-land-price-hike-south-andwest-corridors-kanakapura-and-nelamangala-see-spike-gdp/articleshow-vxi5ows</guid>
            <pubDate>Mon, 18 May 2026 19:06:28 +0530</pubDate>
            <description><![CDATA[ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಊಹಾಪೋಹಗಳಿಂದ ಕನಕಪುರ, ಹಾರೋಹಳ್ಳಿ, ನೆಲಮಂಗಲದಂತಹ ಹೊರವಲಯಗಳಲ್ಲಿ ಭೂ ಚಟುವಟಿಕೆ ಹೆಚ್ಚಾಗಿದೆ. ಕನಕಪುರ ರಸ್ತೆಯಲ್ಲಿ ಭೂಮಿ ಬೆಲೆ ದ್ವಿಗುಣಗೊಂಡಿದ್ದು, ತಜ್ಞರು ಇದು ದೀರ್ಘಾವಧಿಯ ಹೂಡಿಕೆಗೆ ಸೂಕ್ತವೆಂದು ಸಲಹೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knmfwj4sdvsm1w2ztaa0pqhf,imgname-real-estate--2--1775582988441.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ನಗರದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಳವನ್ನು ಕರ್ನಾಟಕ ಸರ್ಕಾರ ಇನ್ನೂ ಅಧಿಕೃತವಾಗಿ ಅಂತಿಮಗೊಳಿಸದಿದ್ದರೂ, ಈ ಮಹತ್ವಾಕಾಂಕ್ಷಿ ಯೋಜನೆಯ ಸುತ್ತ ಹುಟ್ಟಿಕೊಂಡಿರುವ ಊಹಾಪೋಹಗಳು ಈಗಾಗಲೇ ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರಿನ ಹೊರವಲಯಗಳಲ್ಲಿ ಭೂ ಚಟುವಟಿಕೆಯನ್ನು ಗಂಭೀರವಾಗಿ ಹೆಚ್ಚಿಸಿವೆ. ಕನಕಪುರ ರಸ್ತೆ, ಹಾರೋಹಳ್ಳಿ, ನೆಲಮಂಗಲ ಮತ್ತು ಕುಣಿಗಲ್ ಪ್ರದೇಶಗಳಲ್ಲಿ ಹೂಡಿಕೆದಾರರು, ಭೂಸಂಗ್ರಹಕಾರರು ಹಾಗೂ ಡೆವಲಪರ್&zwnj;ಗಳು ಸಕ್ರಿಯವಾಗಿ ಭೂಮಿ ಖರೀದಿಗೆ ಮುಂದಾಗಿದ್ದು, ಇದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೂ ಮುನ್ನ ದೇವನಹಳ್ಳಿಯಲ್ಲಿ ಕಂಡುಬಂದ ಪ್ರಾರಂಭಿಕ ಮಾನ್ಯತೆಯನ್ನು ತೋರಿಸುತ್ತದೆ.&lt;/p&gt;&lt;p&gt;ಆದರೆ, ಪ್ರಸ್ತುತ ಕಂಡುಬರುತ್ತಿರುವ ಈ ಚಟುವಟಿಕೆ ಬಹುತೇಕ ಊಹಾಪೋಹ ಮತ್ತು ಭಾವನೆ ಆಧಾರಿತವಾಗಿದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಎಚ್ಚರಿಸಿದ್ದಾರೆ. ದೊಡ್ಡ ಮಟ್ಟದ ವಸತಿ ಯೋಜನೆಗಳಿಗಿಂತ ಕೃಷಿಭೂಮಿ ವ್ಯವಹಾರಗಳು, ಯೋಜಿತ ಅಭಿವೃದ್ಧಿಗಳು ಮತ್ತು ಭೂ ಬ್ಯಾಂಕಿಂಗ್ ಚಟುವಟಿಕೆಗಳೇ ಹೆಚ್ಚು ಗಮನ ಸೆಳೆಯುತ್ತಿವೆ.&lt;/p&gt;&lt;h2&gt;ಕನಕಪುರ-ಹಾರೋಹಳ್ಳಿ ಕಾರಿಡಾರ್&zwnj;ಗೆ ಭಾರಿ ಬೇಡಿಕೆ&lt;/h2&gt;&lt;p&gt;ಹೊಸವಾಗಿ ಗಮನ ಸೆಳೆಯುತ್ತಿರುವ ಕಾರಿಡಾರ್&zwnj;ಗಳಲ್ಲಿ ಕನಕಪುರ ರಸ್ತೆ-ಹಾರೋಹಳ್ಳಿ ಭಾಗವು ಅತ್ಯಂತ ವೇಗವಾಗಿ ಬೆಳವಣಿಗೆ ಕಂಡಿದೆ. ಉತ್ತಮ ವಸತಿ ಮೂಲಸೌಕರ್ಯ, ಮೆಟ್ರೋ ಸಂಪರ್ಕ ಮತ್ತು ಅಭಿವೃದ್ಧಿಯಾದ ಪ್ರದೇಶಗಳು ಈ ಭಾಗಕ್ಕೆ ಪ್ರಮುಖ ಬಲವಾಗಿದೆ.&lt;/p&gt;&lt;p&gt;ಕಳೆದ 6ರಿಂದ 8 ತಿಂಗಳಲ್ಲಿ ಕನಕಪುರ ರಸ್ತೆಯುದ್ದಕ್ಕೂ ಭೂಮಿಯ ಬೆಲೆಗಳು ದ್ವಿಗುಣಗೊಂಡಿರುವುದು ಗಮನಾರ್ಹ. ಚೂಡಹಳ್ಳಿ, ಸೋಮನಹಳ್ಳಿ ಮತ್ತು ಕಗ್ಗಲಿಪುರದಂತಹ ಪ್ರದೇಶಗಳಲ್ಲಿ ಕಡಿಮೆ ಬೆಲೆ ಮತ್ತು ದೊಡ್ಡ ಭೂ ವ್ಯವಹಾರಗಳ ಲಭ್ಯತೆ ಹೂಡಿಕೆದಾರರನ್ನು ಸೆಳೆಯುತ್ತಿದೆ. ವಿಶೇಷವಾಗಿ ಎನ್&zwnj;ಆರ್&zwnj;ಐಗಳು ಮತ್ತು ಹೆಚ್ಚಿನ ಮೌಲ್ಯದ ಹೂಡಿಕೆದಾರರು ದೀರ್ಘಾವಧಿಯ ಹೂಡಿಕೆ ದೃಷ್ಟಿಯಿಂದ ಇಲ್ಲಿ ಭೂಮಿ ಖರೀದಿಸುತ್ತಿದ್ದಾರೆ.&lt;/p&gt;&lt;p&gt;ಇದೇ ವೇಳೆ, ಡೆವಲಪರ್&zwnj;ಗಳು ಭೂಸ್ವಾಧೀನ ಮತ್ತು ಜಂಟಿ ಅಭಿವೃದ್ಧಿ ಒಪ್ಪಂದಗಳ ಮೂಲಕ ಸದ್ದಿಲ್ಲದೆ ಭೂ ಬ್ಯಾಂಕ್&zwnj;ಗಳನ್ನು ನಿರ್ಮಿಸುತ್ತಿದ್ದಾರೆ. ಇದು ಕೆಐಎ ಆರಂಭಿಕ ಹಂತದಲ್ಲಿ ಉತ್ತರ ಬೆಂಗಳೂರಿನಲ್ಲಿ ಕಂಡುಬಂದ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ. ಕನಕಪುರ-ರಾಮನಗರ ಭಾಗದಲ್ಲಿ ವಿಲ್ಲಾ ಹಾಗೂ ವಾರಾಂತ್ಯದ ಮನೆಗಳ ಯೋಜನೆಗಳಿಗೂ ಬೇಡಿಕೆ ಹೆಚ್ಚುತ್ತಿದೆ.&lt;/p&gt;&lt;h2&gt;ನೆಲಮಂಗಲ-ಕುಣಿಗಲ್: ಲಾಜಿಸ್ಟಿಕ್ಸ್ ಹಬ್ ಆಗುವ ಸಾಧ್ಯತೆ&lt;/h2&gt;&lt;p&gt;ಇನ್ನೊಂದೆಡೆ, ನೆಲಮಂಗಲ-ಕುಣಿಗಲ್ ಕಾರಿಡಾರ್ ವಿಭಿನ್ನ ರೀತಿಯ ಬೆಳವಣಿಗೆಯನ್ನು ಕಾಣುತ್ತಿದೆ. ಈ ಪ್ರದೇಶವು ವಸತಿ ಅಭಿವೃದ್ಧಿಗಿಂತ ಹೆಚ್ಚು ಲಾಜಿಸ್ಟಿಕ್ಸ್ ಮತ್ತು ಕೈಗಾರಿಕಾ ಚಟುವಟಿಕೆಗಳ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯಿಂದ ಸಂಪರ್ಕ ಸುಧಾರಣೆಯಾಗುತ್ತಿರುವುದರಿಂದ ಕೈಗಾರಿಕಾ ಭೂಮಿಗೆ ಬೇಡಿಕೆ ಹೆಚ್ಚಾಗಿದೆ. ಹಾರೋಹಳ್ಳಿ ಮತ್ತು ನೆಲಮಂಗಲ ಸುತ್ತಮುತ್ತ ಇರುವ ಉತ್ಪಾದನಾ ಕ್ಲಸ್ಟರ್&zwnj;ಗಳು ಹಾಗೂ ಕೆಐಎಡಿಬಿ ಕೈಗಾರಿಕಾ ವಲಯಗಳು ಸಾಂಸ್ಥಿಕ ಹೂಡಿಕೆದಾರರ ಗಮನ ಸೆಳೆಯುತ್ತಿವೆ. ತಜ್ಞರ ಪ್ರಕಾರ, ಕನಕಪುರ ಕಾರಿಡಾರ್ ಮಧ್ಯಮಾವಧಿಯ ವಸತಿ ಹೂಡಿಕೆಗಳಿಗೆ ಸೂಕ್ತವಾಗಿದ್ದರೆ, ನೆಲಮಂಗಲ-ಕುಣಿಗಲ್ ದೀರ್ಘಾವಧಿಯ ಲಾಜಿಸ್ಟಿಕ್ಸ್ ಮತ್ತು ಮೂಲಸೌಕರ್ಯ ಆಧಾರಿತ ಹೂಡಿಕೆಗಳಿಗೆ ಹೆಚ್ಚು ಅನುಕೂಲಕರವಾಗಿದೆ.&lt;/p&gt;&lt;h2&gt;ದೇವನಹಳ್ಳಿ ಮಾದರಿ ಪುನರಾವರ್ತನೆ ಆಗುತ್ತದೆಯೇ?&lt;/h2&gt;&lt;p&gt;ಈ ಬೆಳವಣಿಗೆಗಳನ್ನು ದೇವನಹಳ್ಳಿಯೊಂದಿಗೆ ಹೋಲಿಸಲಾಗುತ್ತಿದೆ. 2005ರಲ್ಲಿ ವಿಮಾನ ನಿಲ್ದಾಣ ಘೋಷಣೆಗೊಂಡು 2008ರಲ್ಲಿ ಕಾರ್ಯಾರಂಭವಾದ ಬಳಿಕ ಉತ್ತರ ಬೆಂಗಳೂರಿನಲ್ಲಿ ಭೂಮಿಯ ಬೆಲೆಗಳು ಶೇ.40ರಿಂದ 86ರವರೆಗೆ ಏರಿಕೆ ಕಂಡಿದ್ದವು. ಆದರೆ, ದಕ್ಷಿಣ ಮತ್ತು ಪಶ್ಚಿಮ ಬೆಂಗಳೂರಿನಲ್ಲಿ ಅದೇ ರೀತಿಯ ಬೆಳವಣಿಗೆ ಮರುಕಳಿಸುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಪ್ರದೇಶಗಳು ವಿಭಜಿತವಾಗಿದ್ದು, ಸಾಮಾಜಿಕ ಮೂಲಸೌಕರ್ಯ ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿಯಾಗಿಲ್ಲ. ಜೊತೆಗೆ, ಇಂದಿನ ಸಂಘಟಿತ ರಿಯಲ್ ಎಸ್ಟೇಟ್ ಮಾರುಕಟ್ಟೆ ಪರಿಸ್ಥಿತಿ ಬೆಲೆ ಏರಿಕೆಯನ್ನು ವೇಗಗೊಳಿಸಿರುವುದರಿಂದ ಆರಂಭಿಕ ಹೂಡಿಕೆದಾರರಿಗೆ ಲಾಭಗಳು ಕಡಿಮೆ.&lt;/p&gt;&lt;h2&gt;ದೀರ್ಘಾವಧಿ ಹೂಡಿಕೆ ದೃಷ್ಟಿ ಅಗತ್ಯ&lt;/h2&gt;&lt;p&gt;ಮುಖ್ಯವಾಗಿ, ಎರಡನೇ ವಿಮಾನ ನಿಲ್ದಾಣ ಯೋಜನೆ ಇನ್ನೂ ಪ್ರಾರಂಭಿಕ ಹಂತದಲ್ಲಿದ್ದು, ಸ್ಥಳ ಆಯ್ಕೆ ಮತ್ತು ಅನುಮೋದನೆ ಪ್ರಕ್ರಿಯೆಗಳು ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಆದ್ದರಿಂದ ತಜ್ಞರು ಹೂಡಿಕೆದಾರರಿಗೆ ಇದನ್ನು ಅಲ್ಪಾವಧಿಯ ಲಾಭಕ್ಕಾಗಿ ಅಲ್ಲ, 7ರಿಂದ 10 ವರ್ಷಗಳ ದೀರ್ಘಾವಧಿಯ ಹೂಡಿಕೆಯಾಗಿ ಪರಿಗಣಿಸುವಂತೆ ಸಲಹೆ ನೀಡಿದ್ದಾರೆ. ಒಟ್ಟಾರೆ, ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಈಗಾಗಲೇ ರಿಯಲ್ ಎಸ್ಟೇಟ್ ಮಾರುಕಟ್ಟೆಯಲ್ಲಿ ಚಟುವಟಿಕೆ ಹೆಚ್ಚಿಸಿದರೂ, ಭವಿಷ್ಯದ ಲಾಭಕ್ಕಾಗಿ ಯುಕ್ತಿಯುತ ಮತ್ತು ಸಹನೆಯ ಹೂಡಿಕೆ ಅಗತ್ಯವೆಂಬುದು ಸ್ಪಷ್ಟವಾಗಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-second-airport-buzz-triggers-land-price-hike-south-andwest-corridors-kanakapura-and-nelamangala-see-spike-gdp/articleshow-vxi5ows"/>
        </item>
        <item>
            <title><![CDATA[ಬೆಂಗಳೂರು ವಿಮಾನ ನಿಲ್ದಾಣ: 40 ಕೋಟಿ ಪ್ರಯಾಣಿಕರ ದಾಖಲೆ! ಕಾರ್ಗೊ ಸಾಗಣೆಯಲ್ಲೂ ಟಾಪ್, ಐತಿಹಾಸಿಕ ಮೈಲಿಗಲ್ಲು!]]></title>
            <link>https://kannada.asianetnews.com/gallery/karnataka-districts/kempegowda-international-airport-serves-40-crore-passengers-sets-new-milestone-international-travel-cargo-growth-gdp-ww1czxr</link>
            <guid isPermaLink="true">https://kannada.asianetnews.com/gallery/karnataka-districts/kempegowda-international-airport-serves-40-crore-passengers-sets-new-milestone-international-travel-cargo-growth-gdp-ww1czxr</guid>
            <pubDate>Sun, 17 May 2026 17:46:05 +0530</pubDate>
            <description><![CDATA[&lt;p&gt;ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 40 ಕೋಟಿ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 2025-26ನೇ ಸಾಲಿನಲ್ಲಿ 44.47 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.23.9ರಷ್ಟು ಭಾರೀ ಏರಿಕೆ ಕಂಡಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kfhnebqj86vxrygmmjhr60d9,imgname-bengaluru-airport-1769045700337.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 40 ಕೋಟಿ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 2025-26ನೇ ಸಾಲಿನಲ್ಲಿ 44.47 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.23.9ರಷ್ಟು ಭಾರೀ ಏರಿಕೆ ಕಂಡಿದೆ. &amp;nbsp;&lt;/p&gt;&lt;img&gt;&lt;p&gt;ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್&zwnj;) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದ್ದು, 2026ರ ಏಪ್ರಿಲ್ ವೇಳೆಗೆ ಒಟ್ಟು 40 ಕೋಟಿ ಪ್ರಯಾಣಿಕರಿಗೆ ಸೇವೆ ಒದಗಿಸುವ ಮೂಲಕ ಹೊಸ ಮೈಲಿಗಲ್ಲು ನಿರ್ಮಿಸಿದೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಿಐಎಎಲ್ ಆಡಳಿತ ಮಂಡಳಿಯ 2025-26ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ.&lt;/p&gt;&lt;img&gt;&lt;p&gt;ವಿಮಾನ ನಿಲ್ದಾಣ ಆರಂಭವಾದ 2008ರಿಂದ ಇಂದಿನವರೆಗೆ 40 ಕೋಟಿ ಪ್ರಯಾಣಿಕರಿಗೆ ಸೇವೆ ನೀಡಿರುವುದು ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. 2025-26ನೇ ಹಣಕಾಸು ವರ್ಷದಲ್ಲಿ ಮಾತ್ರವೇ 44.47 ಮಿಲಿಯನ್ (ದಶಲಕ್ಷ) ಪ್ರಯಾಣಿಕರು ಈ ವಿಮಾನ ನಿಲ್ದಾಣವನ್ನು ಬಳಸಿಕೊಂಡಿದ್ದಾರೆ.&lt;/p&gt;&lt;p&gt;ಹಿಂದಿನ ವರ್ಷದ ಹೋಲಿಕೆಯಲ್ಲಿ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.6.2ರಷ್ಟು ಏರಿಕೆ ಕಂಡುಬಂದಿದೆ. ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.23.9ರಷ್ಟು ಭಾರೀ ವೃದ್ಧಿ ಕಂಡುಬಂದಿದ್ದು, 7.23 ಮಿಲಿಯನ್ ಪ್ರಯಾಣಿಕರು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚರಿಸಿದ್ದಾರೆ. ದೇಶೀಯ ಪ್ರಯಾಣಿಕರ ಸಂಖ್ಯೆಯೂ ಶೇ.3.3ರಷ್ಟು ಏರಿಕೆಯಾಗಿ 37.24 ಮಿಲಿಯನ್&zwnj;ಗೆ ತಲುಪಿದೆ.&lt;/p&gt;&lt;img&gt;&lt;p&gt;ವಿಮಾನ ನಿಲ್ದಾಣವು ಸರಕು ಸಾಗಣೆ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದ್ದು, 2025-26ನೇ ಸಾಲಿನಲ್ಲಿ 5.32 ಲಕ್ಷ ಟನ್&zwnj; ಕಾರ್ಗೊ ಸಾಗಣೆ ಮಾಡಲಾಗಿದೆ. 15 ಸರಕು ವಿಮಾನ ಸಂಸ್ಥೆಗಳ ಮೂಲಕ ಚಿಕಾಗೊ, ಸಿಂಗಾಪುರ, ಲಂಡನ್ ಹಾಗೂ ಫ್ರಾಂಕ್&zwnj;ಫರ್ಟ್ ಸೇರಿದಂತೆ 38 ಜಾಗತಿಕ ಹಬ್&zwnj;ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.&lt;/p&gt;&lt;p&gt;ವಿಶೇಷವಾಗಿ, ಗುಲಾಬಿ ಹೂವುಗಳ ರಫ್ತು (6 ಕೋಟಿ ಹೂವುಗಳು &ndash; ಶೇ.38 ಏರಿಕೆ), ಮಾವಿನ ಹಣ್ಣು (ಶೇ.12 ಏರಿಕೆ) ಮತ್ತು ಕೊತ್ತಂಬರಿ ಸೊಪ್ಪು (ಶೇ.13 ಏರಿಕೆ) ಪ್ರಮುಖವಾಗಿ ಸಾಗಾಣಿಕೆಗೊಂಡಿವೆ.&lt;/p&gt;&lt;img&gt;&lt;p&gt;ಪ್ರಯಾಣಿಕರ ಅನುಭವ, ತಂತ್ರಜ್ಞಾನ ಬಳಕೆ, ಸುರಕ್ಷತೆ ಹಾಗೂ ಆಧುನಿಕ ವಿನ್ಯಾಸ ಸೇರಿದಂತೆ ಹಲವು ವಿಭಾಗಗಳಲ್ಲಿ ವಿಮಾನ ನಿಲ್ದಾಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ ಎಂದು ಬಿಐಎಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.&lt;/p&gt;&lt;h2&gt;ಸಾಮರ್ಥ್ಯ ವಿಸ್ತರಣೆಯ ಚರ್ಚೆ&lt;/h2&gt;&lt;p&gt;ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣದ ಸಾಮರ್ಥ್ಯವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.&lt;/p&gt;&lt;img&gt;&lt;p&gt;ವಿಮಾನ ನಿಲ್ದಾಣವು ಒಂದೇ ದಿನದಲ್ಲಿ ಗರಿಷ್ಠ 1.39 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಪ್ರಸ್ತುತ, ಈ ವಿಮಾನ ನಿಲ್ದಾಣವು 78 ದೇಶೀಯ ಮತ್ತು 34 ಅಂತಾರಾಷ್ಟ್ರೀಯ ಸ್ಥಳಗಳಿಗೆ ನೇರ ಸಂಪರ್ಕ ಕಲ್ಪಿಸುತ್ತಿದೆ.&lt;/p&gt;&lt;p&gt;ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರ ಸಂಖ್ಯೆ, ಕಾರ್ಗೊ ಸೇವೆ ಮತ್ತು ಅಂತಾರಾಷ್ಟ್ರೀಯ ಸಂಪರ್ಕದ ದೃಷ್ಟಿಯಿಂದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಿಮಾನ ನಿಲ್ದಾಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಣೆ ಮೂಲಕ ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಬಲಪಡಿಸುವ ನಿರೀಕ್ಷೆ ಇದೆ.&lt;/p&gt;]]></content:encoded>
            <category>bengaluru-rural</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/kempegowda-international-airport-serves-40-crore-passengers-sets-new-milestone-international-travel-cargo-growth-gdp-ww1czxr"/>
        </item>
        <item>
            <title><![CDATA[ದೊಡ್ಡಾಲಹಳ್ಳಿ ಕೆಪಿಎಸ್ ಶಾಲೆಗೆ ಡಿಕೆ ಶಿವಕುಮಾರ್ ಅವರ ಅಜ್ಜ, ತಂದೆಯ ಹೆಸರು ನಾಮಕರಣ]]></title>
            <link>https://kannada.asianetnews.com/karnataka-districts/kanakapura-doddalahalli-kps-school-named-after-dcm-dk-shivakumar-s-grandfather-and-father-mrq/articleshow-zwf16qh</link>
            <guid isPermaLink="true">https://kannada.asianetnews.com/karnataka-districts/kanakapura-doddalahalli-kps-school-named-after-dcm-dk-shivakumar-s-grandfather-and-father-mrq/articleshow-zwf16qh</guid>
            <pubDate>Sat, 16 May 2026 08:06:46 +0530</pubDate>
            <description><![CDATA[&lt;p&gt;DCM DK Shivakumar: ಕನಕಪುರದ ದೊಡ್ಡಾಲಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಗೆ, ಭೂಮಿ ದಾನ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪೂರ್ವಜರಾದ 'ಶ್ರೀ ಡಿ.ಕೆ.ಕೆಂಪೇಗೌಡ' ಅವರ ಹೆಸರನ್ನು ಮರುನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqa2ypn411epexs4cs62qz4,imgname-dk-shivakumar-1778898795221.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಸರ್ಕಾರಿ ಶಾಲೆಗೆ 3.20 ಎಕರೆ ಭೂಮಿಯನ್ನು ಹಿಂದೆ ದಾನವಾಗಿ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಅವರ ಪೂರ್ವಜರ ಹೆಸರನ್ನು ಈಗ ಅಲ್ಲಿ ಮೇಲ್ದರ್ಜೆಗೇರಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಮರು ನಾಮಕರಣ ಮಾಡಲು ಸರ್ಕಾರ ಆದೇಶಿಸಿದೆ.&lt;/p&gt;&lt;p&gt;ದೊಡ್ಡ ಆಲಹಳ್ಳಿಯ ಕೆಪಿಎಸ್&zwnj;ಅನ್ನು &lsquo;ಶ್ರೀ ಡಿ.ಕೆ.ಕೆಂಪೇಗೌಡ ಕರ್ನಾಟಕ ಪಬ್ಲಿಕ್&zwnj; ಶಾಲೆ&rsquo; ಎಂದು ಮರು ನಾಮಕರಣ ಮಾಡಲು ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಮಾಡಿದೆ.&lt;/p&gt;&lt;h2&gt;&lt;strong&gt;ಡಿ.ಕೆ.ಕೆಂಪೇಗೌಡ ಶಾಲೆ&lt;/strong&gt;&lt;/h2&gt;&lt;p&gt;ಡಿ.ಕೆ.ಶಿವಕುಮಾರ್&zwnj; ಅವರ ಪೂರ್ವಜರಾದ ನಿಂಗಮ್ಮ ಕೋಂ ಲೇಟ್&zwnj; ದೊಡ್ಡ ಕೆಂಪೇಗೌಡ ಅವರು ಈ ಹಿಂದೆ ದೊಡ್ಡ ಆಲಹಳ್ಳಿ ಸರ್ಕಾರಿ ಶಾಲೆಗೆ 3 ಎಕರೆ 20 ಗುಂಟೆ ಜಮೀನನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ದಾನವಾಗಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಅವರು ಈ ಶಾಲೆಗೆ &lsquo;ಶ್ರೀ ಡಿ.ಕೆ.ಕೆಂಪೇಗೌಡ ಕೆಪಿಎಸ್&zwnj;&rsquo; ಎಂದು ಮರು ನಾಮಕರಣ ಮಾಡಲು ಶಿಫಾರಸು ಮಾಡಿದ್ದರು. ಅದರಂತೆ ಶಿಕ್ಷಣ ಇಲಾಖೆ ನಿಯಮಾನುಸಾರ ಕ್ರಮ ಕೈಗೊಂಡು ಮರು ನಾಮಕರಣಕ್ಕೆ ಆದೇಶ ಮಾಡಿದೆ. ಮಾಹಿತಿ ಪ್ರಕಾರ, ಡಿ.ಕೆ.ಶಿವಕುಮಾರ್&zwnj; ಅವರ ತಾತ ಮತ್ತು ತಂದೆ ಇಬ್ಬರ ಹೆಸರನ್ನೂ ಸೇರಿಸಿ ಡಿ.ಕೆ.ಕೆಂಪೇಗೌಡ ಎಂಬ ಹೆಸರು ಇಡಲಾಗಿದೆ ಎನ್ನಲಾಗಿದೆ.&lt;/p&gt;&lt;h3&gt;&lt;strong&gt;ದೊಡ್ಡ ಆಲಹಳ್ಳಿ ಕೆಪಿಎಸ್&zwnj;ಗೆ ಡಿ.ಕೆ.ಕೆಂಪೇಗೌಡ ಕರ್ನಾಟಕ ಪಬ್ಲಿಕ್&zwnj; ಶಾಲೆ&lt;/strong&gt;&lt;/h3&gt;&lt;p&gt;ರಾಜ್ಯದಲ್ಲಿ ಮೂಂದಿನ ಮೂರು ವರ್ಷಗಳಲ್ಲಿ ಸುಮಾರು 900 ಶಾಲೆಗಳನ್ನು ಕರ್ನಾಟಕ ಪಬ್ಲಿಕ್&zwnj; ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ಆಸಕ್ತಿ ವಹಿಸಿರುವ ಸರ್ಕಾರ, ಸಾಮಾನ್ಯ ಶಾಲೆಗಳನ್ನು ಕೆಪಿಎಸ್&zwnj;ಗಳಾಗಿ ಅಭಿವೃದ್ಧಿಪಡಿಸಲು ಮುಂದೆ ಬರುವ ದಾನಿಗಳು, ಸಂಸ್ಥೆಗಳು ಇಚ್ಚಿಸಿದರೆ ಅವರ ಹೆಸರನ್ನು ಶಾಲೆಗಳಿಗೆ ನಾಮಕರಣ ಮಾಡಲು ಕೆಲ ಮಾನದಂಡಗಳನ್ನು ನಿಗದಿಪಡಿಸಿದೆ. ಅದರಂತೆ ದೊಡ್ಡ ಆಲಹಳ್ಳಿ ಕೆಪಿಎಸ್&zwnj;ಗೆ ಡಿ.ಕೆ.ಕೆಂಪೇಗೌಡ ಕರ್ನಾಟಕ ಪಬ್ಲಿಕ್&zwnj; ಶಾಲೆ ಎಂದು ನಾಮಕರಣ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;]]></content:encoded>
            <category>bengaluru-rural</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/kanakapura-doddalahalli-kps-school-named-after-dcm-dk-shivakumar-s-grandfather-and-father-mrq/articleshow-zwf16qh"/>
        </item>
    </channel>
</rss>
