<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 02 Jun 2026 14:34:32 +0530</lastBuildDate>
        <atom:link href="https://kannada.asianetnews.com/rss/bidar" rel="self" type="application/rss+xml"/>
        <item>
            <title><![CDATA[ಬೀದರ್: ನೈಜ ಫಲಾನುಭವಿಗಳನ್ನ ಕೈಬಿಟ್ಟು, ಹಣ ಕೊಟ್ಟವರಿಗೆ ಮನೆ? ಪಂಚಾಯ್ತಿ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ಮಲ್ಕಾಪುರ ಗ್ರಾಮಸ್ಥರು]]></title>
            <link>https://kannada.asianetnews.com/state/bidar-malkapur-villagers-protest-against-officials-over-housing-scam/articleshow-0h1i9r9</link>
            <guid isPermaLink="true">https://kannada.asianetnews.com/state/bidar-malkapur-villagers-protest-against-officials-over-housing-scam/articleshow-0h1i9r9</guid>
            <pubDate>Wed, 28 Jan 2026 18:44:32 +0530</pubDate>
            <description><![CDATA[&lt;p&gt;ಬೀದರ್ ತಾಲೂಕಿನ ಮಲ್ಕಾಪುರ ಗ್ರಾಮ ಸಭೆಯಲ್ಲಿ ಆಶ್ರಯ ಯೋಜನೆಯ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರ್ಹರನ್ನು ಕೈಬಿಟ್ಟು ಅನರ್ಹರಿಗೆ ನಿವೇಶನ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಭೆಯು ರಣರಂಗವಾಯ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kg2bkfk4nbs2hxgc656rjhq9,imgname----------------------91--1769605807716.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಜ.28)&lt;/strong&gt;: ಬೀದರ್ ತಾಲೂಕಿನ ಮಲ್ಕಾಪುರ ಗ್ರಾಮದಲ್ಲಿ ಇಂದು ನಡೆದ ಗ್ರಾಮ ಸಭೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತ್ತು. ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ಘಟನೆ ನಡೆದಿದೆ.&lt;/p&gt;&lt;h2&gt;ಹಣಬಲಕ್ಕೆ ಮಣಿದರೇ ಅಧಿಕಾರಿಗಳು? ಭ್ರಷ್ಟಾಚಾರದ ಗಂಭೀರ ಆರೋಪ&lt;/h2&gt;&lt;p&gt;ಬಡವರಿಗಾಗಿ ಮೀಸಲಿಟ್ಟ ಸುಮಾರು 2.5 ಎಕರೆ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಲು ಇಂದು ಇಒ (EO) ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ, ಅರ್ಹ ಫಲಾನುಭವಿಗಳನ್ನು ಕೈಬಿಟ್ಟು, ಹಣಬಲ ಇರುವವರಿಗೆ ಮತ್ತು ಅನರ್ಹರಿಗೆ ನಿವೇಶನ ನೀಡಲಾಗುತ್ತಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರ ಆಕ್ರೋಶ ಕಟ್ಟೆಯೊಡೆಯಿತು. 'ಹಣ ಪಡೆದು ಮನೆ ಆಯ್ಕೆ ಪ್ರಕ್ರಿಯೆಯಲ್ಲಿ ಮೋಸ ಮಾಡಲಾಗುತ್ತಿದೆ' ಎಂದು ಸಾರ್ವಜನಿಕರು ನೇರವಾಗಿಯೇ ಅಧಿಕಾರಿಗಳನ್ನು ಪ್ರಶ್ನಿಸಿದರು.&lt;/p&gt;&lt;h3&gt;ಪಂಚಾಯತ್ ಅಧಿಕಾರಿಗಳು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ&lt;/h3&gt;&lt;p&gt;ಸಭೆಯ ಆರಂಭದಲ್ಲೇ ಆಯ್ಕೆ ಪಟ್ಟಿಯ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ತೀವ್ರ ಸ್ವರೂಪದ ಗಲಾಟೆ ನಡೆಯಿತು. ನೈಜ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.&lt;/p&gt;&lt;p&gt;&lt;strong&gt;ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ&lt;/strong&gt;&lt;/p&gt;&lt;p&gt;ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸರು ಧಾವಿಸಿದರು. ರೊಚ್ಚಿಗೆದ್ದಿದ್ದ ಗ್ರಾಮಸ್ಥರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸಾಕಷ್ಟು ಸಮಯದ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು. ಸದ್ಯ ಮಲ್ಕಾಪುರದಲ್ಲಿ ಬಿಗುವಿನ ವಾತಾವರಣವಿದ್ದು, ನಿವೇಶನ ಹಂಚಿಕೆ ಪ್ರಕ್ರಿಯೆ ಬಗ್ಗೆ ಗ್ರಾಮಸ್ಥರಲ್ಲಿ ಅಸಮಾಧಾನ ಮುಂದುವರಿದಿದೆ.&lt;/p&gt;]]></content:encoded>
            <category>bidar</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/bidar-malkapur-villagers-protest-against-officials-over-housing-scam/articleshow-0h1i9r9"/>
        </item>
        <item>
            <title><![CDATA[Stray Dog Attacks 4 Month Old Baby: ಮನೆಯೊಳಗೆ ಮಲಗಿದ್ದ 4 ತಿಂಗಳ ಕಂದಮ್ಮನ ಮೇಲೆ ಬೀದಿ ನಾಯಿ ದಾಳಿ, ಚಿಕಿತ್ಸೆ ಫಲಿಸದೆ ಮಗು ಸಾವು]]></title>
            <link>https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq</link>
            <guid isPermaLink="true">https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq</guid>
            <pubDate>Sun, 10 May 2026 09:46:34 +0530</pubDate>
            <description><![CDATA[&lt;p&gt;ಬೀದರ್&zwnj;ನ ದುಬಲಗುಂಡಿ ಗ್ರಾಮದಲ್ಲಿ, ಮನೆಯೊಳಗೆ ಮಲಗಿದ್ದ ನಾಲ್ಕು ತಿಂಗಳ ಕಂದಮ್ಮನ ಮೇಲೆ ಬೀದಿ ನಾಯಿ ದಾಳಿ ಮಾಡಿ, ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಈ ಘಟನೆಗೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸಚಿವರಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr81bvq01w04qwrg64073wzr,imgname-----------------------2026-05-10t093449.241-1778386333408.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ.10)&lt;/strong&gt;: ಮನೆಯ ಒಳಗಡೆ ಮಲಗಿದ್ದ ನಾಲ್ಕು ತಿಂಗಳ ಕಂದಮ್ಮನನ್ನು ಬೀದಿ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಕಚ್ಚಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನಪ್ಪಿದ ಘಟನೆ ಶನಿವಾರ ಬೆಳಗ್ಗೆ ಹುಮನಾಬಾದ್&zwnj; ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಸಂಭವಿಸಿದೆ.&lt;/p&gt;&lt;p&gt;ಸುಧಾ ಹಾಗೂ ಸಿದ್ಧಪ್ಪ ದಂಪತಿಯ ಮಗು ಬೀದಿ ನಾಯಿ ದಾಳಿಗೆ ಬಲಿಯಾಗಿದ್ದು, ನಾಯಿ ದಾಳಿಯಿಂದ ಮಗುವಿನ ಮುಖ, ಕಣ್ಣು ಹಾಗೂ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಇದರಿಂದ ದುಬಲಗುಂಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್&zwnj;ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು, ಆದರೆ ಮಗು ಚಿಕಿತ್ಸೆ ಫಲಿಸದೆ ಅಸುನೀಗಿದೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;ಮಗುವನ್ನು ಮನೆಯೊಳಗೆ ಮಲಗಿಸಿ ತಾಯಿ ಹೊರಗೆ ಕೆಲಸ ಮಾಡುವಾಗ ಬೀದಿ ನಾಯಿಯೊಂದು ಮನೆಯೊಳಗೆ ನುಗ್ಗಿ ಮಗುವಿನ ದೇಹದ ವಿವಿಧ ಭಾಗಗಳನ್ನು ಕಚ್ಚಿದ್ದರಿಂದ ಮಗು ಗಂಭೀರವಾಗಿ ಗಾಯಗೊಂಡು ಅತ್ತಿರುವ ಶಬ್ದ ಕೇಳಿ ಪಾಲಕರು ಓಡಿ ಬಂದು ನೋಡುವಷ್ಟರಲ್ಲಿ ಮಗು ನಾಯಿ ದಾಳಿಕ್ಕೆ ತುತ್ತಾಗಿತ್ತು ಎಂದು ಹೇಳಲಾಗಿದೆ. ಈ ನಾಯಿ ಗ್ರಾಮದ ಇತರೇ ಒಬ್ಬ ಬಾಲಕ ಸೇರಿ ಮೂರು ಜನರಿಗೂ ನಾಯಿ ದಾಳಿ ನಡೆಸಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಇನ್ನು, ಮಗು ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳೇ ಕಾರಣವಾಗಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;ಸಚಿವ ಖಂಡ್ರೆ ಕಂಬನಿ:&lt;/h2&gt;&lt;p&gt;ಮೃತ ಕಂದಮ್ಮನ ಕುಟುಂಬದವರೊಂದಿಗೆ ಈ ನೋವಿನ ಸಂದರ್ಭದಲ್ಲಿ ಸರ್ಕಾರ ನಿಲ್ಲುತ್ತದೆ. ದೇವರು ಮೃತ ಮಗುವಿನ ಆತ್ಮಕ್ಕೆ ಚಿರಶಾಂತಿ ನೀಡಲಿ, ತಂದೆ ತಾಯಿಗಳಿಗೆ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಕೂಡಲೇ ನಿಯಮಾನುಸಾರ ಪರಿಹಾರ ನೀಡುವಂತೆ ಬೀದರ್&zwnj; ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq"/>
        </item>
        <item>
            <title><![CDATA[100 ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಘೋಷಿಸಿದ ಬೀದರ್‌ ಶಿಕ್ಷಣ ಸಂಸ್ಥೆ]]></title>
            <link>https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56</link>
            <guid isPermaLink="true">https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56</guid>
            <pubDate>Sun, 26 Apr 2026 10:01:58 +0530</pubDate>
            <description><![CDATA[&lt;p&gt;ಬೀದರ್ ಶಿಕ್ಷಣ ಸಂಸ್ಥೆಯು ಎಸ್&zwnj;ಎಸ್&zwnj;ಎಲ್&zwnj;ಸಿಯಲ್ಲಿ 95%ಕ್ಕೂ ಹೆಚ್ಚು ಅಂಕ ಗಳಿಸಿದ 100 ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಘೋಷಿಸಿದೆ. ಈ ಯೋಜನೆಯಲ್ಲಿ ಗ್ರಾಮೀಣ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಫೌಂಡೇಷನ್&zwnj; ಕೋರ್ಸ್&zwnj;ಗಳನ್ನು ಸಹ ನಡೆಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ka2kmz9ezq63cnffyr5h4qqs,imgname-7518c2f3-9195-4ab3-95cb-0b026dfcb5a3--1--1763171794222.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್&zwnj;: &lt;/strong&gt;ಪ್ರಸಕ್ತ ಸಾಲಿನ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಶೇಕಡ 95ಕ್ಕೂ ಅಧಿಕ ಅಂಕ ಗಳಿಸಿದ ರಾಜ್ಯದ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷದ ಪಿಯು ಶಿಕ್ಷಣವನ್ನು ಉಚಿತವಾಗಿ ನೀಡುವುದಾಗಿ ಇಲ್ಲಿಯ ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಪ್ರಕಟಿಸಿದೆ.&lt;/p&gt;&lt;p&gt;100 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬೀದರ್&zwnj; ಸೇರಿದಂತೆ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುವುದು. ಉಚಿತ ಸ್ಥಾನಗಳಲ್ಲಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಓದಿದ, ತಂದೆಯನ್ನು ಕಳೆದುಕೊಂಡ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ಆದ್ಯತೆ ಕೊಡಲಾಗುವುದು ಎಂದು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್&zwnj; ಖದೀರ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ಉಚಿತ ಶಿಕ್ಷಣ ಯೋಜನೆಯ ಉದ್ದೇಶವಾಗಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಬೋಧನಾ ಶುಲ್ಕದ ಸಂಪೂರ್ಣ ರಿಯಾಯಿತಿ ಇರಲಿದೆ. ಅರ್ಹ ವಿದ್ಯಾರ್ಥಿಗಳು ಸಮೂಹದ ಪದವಿ ಪೂರ್ವ ಕಾಲೇಜುಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಎಐಸಿಯುಗೆ ಶೇ.100 ಫಲಿತಾಂಶ&lt;/strong&gt;&lt;/h2&gt;&lt;p&gt;ಶಾಲೆ ಬಿಟ್ಟ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಮರಳಿ ಮುಖ್ಯವಾಹಿನಿಗೆ ತರಲು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಆರಂಭಿಸಿದ ಶೈಕ್ಷಣಿಕ ತುರ್ತು ನಿಗಾ ಘಟಕ (ಎಐಸಿಯು) ಪರಿಣಾಮಕಾರಿ ಫಲಿತಾಂಶ ನೀಡುತ್ತಾ ಮುನ್ನಡೆದಿದೆ. ಶಾಲೆ ಬಿಟ್ಟ 90 ವಿದ್ಯಾರ್ಥಿಗಳು ಇಲ್ಲಿಯ ಶಾಹೀನ್&zwnj; ಪ್ರೌಢಶಾಲೆಯಲ್ಲಿ ಈ ಬಾರಿಯ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಶಾಹೀನ್&zwnj; ತುರ್ತು ಶೈಕ್ಷಣಿಕ ನಿಗಾ ಘಟಕದಲ್ಲಿ ಓದಿದವರಾಗಿರುವುದು ವಿಶೇಷ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;p&gt;ವಿಶೇಷ ನಿಗಾ ಮೂಲಕ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಮುಖ್ಯವಾಹಿನಿಗೆ ತರುವ ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಶಾಹೀನ್&zwnj; ಶೈಕ್ಷಣಿಕ ತುರ್ತು ನಿಗಾ ಘಟಕದ ಮಾದರಿಯನ್ನು ಪ್ರಶಂಸಿಸಿರುವ ಜಾಗತಿಕ ಮಟ್ಟದ ನಿಯತಕಾಲಿಕೆಯ ಭಾರತೀಯ ಆವೃತ್ತಿಯಾದ ಫೋರ್ಬ್ಸ್&zwnj; ಇಂಡಿಯಾ, ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್&zwnj; ಖದೀರ್&zwnj; ಅವರನ್ನು ''''&lsquo;ಲೀಡರ್&zwnj; ಆಫ್&zwnj; ಟುಮಾರೋ&rsquo; ಎಂದು ಗುರುತಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಎಸ್ಸೆಸ್ಸೆಲ್ಸಿ ಕನ್ನಡದಲ್ಲಿ ಫೇಲಾಗಿದ್ದು ಮಕ್ಕಳಷ್ಟೇ ಅಲ್ಲ; ಅಮುಲಾಗ್ರ ಬದಲಾವಣೆಗೆ ತಜ್ಞರ ಒತ್ತಡ&lt;/strong&gt;&lt;/p&gt;&lt;h3&gt;&lt;strong&gt;ಪ್ರಿ ಪ್ಲಸ್&zwnj; ಟು ಫೌಂಡೇಷನ್&zwnj; ಕೋರ್ಸ್&amp;nbsp;&lt;/strong&gt;&lt;/h3&gt;&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿಯಲ್ಲಿ ಉತ್ತೀರ್ಣ, ಅನುತ್ತೀರ್ಣರಾದವರಿಗೆ ವಿಷಯಗಳ ಮೇಲೆ ಹಿಡಿತವಿಲ್ಲದ, ವಿಷಯಗಳನ್ನು ಅರಿತುಕೊಳ್ಳಲಾಗದ ವಿದ್ಯಾರ್ಥಿಗಳ ನೀಟ್&zwnj; / ಜೆಇಇ ಕನಸು ಸಾಕಾರಗೊಳಿಸಲು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಮೂರು ವರ್ಷದ ಪ್ರಿ ಪ್ಲಸ್&zwnj; ಟು ಫೌಂಡೇಷನ್&zwnj; ಕೋರ್ಸ್ ಸಹ ಆರಂಭಿಸಿದೆ ಎಂದು ಅಬ್ದುಲ್&zwnj; ಖದೀರ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಶಾಹೀನ್&zwnj; ವೆಬ್ಸೈಟ್ &lt;strong&gt;https://shaheengroup.org&lt;/strong&gt; ಹಾಗೂ ಟೋಲ್&zwnj; ಫ್ರೀ ಸಂಖ್ಯೆ&lt;strong&gt; 1800 121 6235&lt;/strong&gt; ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೊನೆಗೂ ಅಂಧ ವಿದ್ಯಾರ್ಥಿನಿಗೆ ಅಂಕದ ಬೆಳಕು ನೀಡಿದ SSLC ಬೋರ್ಡ್! ಫೇಲಾದ ಹುಡಗಿಗೆ ಈಗ 603 ಅಂಕ!&lt;/strong&gt;&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56"/>
        </item>
        <item>
            <title><![CDATA[Prabhu Chauhan: 'ಇದು ರಾಜಕೀಯ ಪ್ರೇರಿತ' ಶಾಸಕ ಚವ್ಹಾಣ್‌ ಜಾತಿ ವಿವಾದ, ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು]]></title>
            <link>https://kannada.asianetnews.com/state/mla-chavan-caste-dispute-supreme-court-delivers-major-judgment-rav/articleshow-5y5foeq</link>
            <guid isPermaLink="true">https://kannada.asianetnews.com/state/mla-chavan-caste-dispute-supreme-court-delivers-major-judgment-rav/articleshow-5y5foeq</guid>
            <pubDate>Fri, 22 May 2026 06:48:32 +0530</pubDate>
            <description><![CDATA[&lt;p&gt;ಔರಾದ್&zwnj; ಶಾಸಕ ಪ್ರಭು ಚವ್ಹಾಣ್&zwnj; ಅವರ ಜಾತಿ ಮತ್ತು ಮೂಲ ನಿವಾಸವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್&zwnj; ವಜಾಗೊಳಿಸಿದೆ. ಈ ದೂರು ರಾಜಕೀಯ ಪ್ರೇರಿತ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, &amp;nbsp;ಸ್ಥಳೀಯರು, ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಹೈಕೋರ್ಟ್&zwnj; ತೀರ್ಪನ್ನು ಎತ್ತಿಹಿಡಿದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks6krpv8nrqyjn9gvd7wc7bx,imgname-----------------------2026-05-22t064031.911-1779412261736.jpg" type="image/jpeg" height="390" width="690"/>
            <content:encoded><![CDATA[&lt;p&gt;ನಿರಾಳ - ಜಾತಿ, ಮೂಲನಿವಾಸಿ ವಿವಾದ ಬಗ್ಗೆ ದೂರು ರಾಜಕೀಯ ಪ್ರೇರಿತ: ಕೋರ್ಟ್&zwnj;&lt;/p&gt;&lt;p&gt;&amp;nbsp;&lt;strong&gt;ಔರಾದ್&zwnj; (ಮೇ.22): &lt;/strong&gt;ಮಾಜಿ ಸಚಿವ, ಔರಾದ್&zwnj; ಶಾಸಕ ಪ್ರಭು ಚವ್ಹಾಣ್&zwnj; ವಿರುದ್ಧ ಮೂಲನಿವಾಸ ಸ್ಥಳ ಹಾಗೂ ಜಾತಿ ಮೂಲ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್&zwnj;, ಇವರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ, ಚುನಾವಣೆಯಲ್ಲಿ ಅಕ್ರಮವಾಗಿ ಸ್ಪರ್ಧಿಸಿದ್ದಾರೆ ಎಂಬ ವಾದವನ್ನು ತಳ್ಳಿ ಹಾಕಿದೆ.&lt;/p&gt;&lt;h2&gt;ಪ್ರಕರಣವೇನು?:&lt;/h2&gt;&lt;p&gt;ಶಾಸಕ ಪ್ರಭು ಚವ್ಹಾಣ್&zwnj; ಅವರು ಮಹಾರಾಷ್ಟ್ರ ಮೂಲದವರು. ಮಹಾರಾಷ್ಟ್ರದಲ್ಲಿ ಲಂಬಾಣಿ ಸಮಾಜವು ವಿಮುಕ್ತ ಜಾತಿ (ವಿಜೆ-ಎ) ಮೀಸಲಾತಿ ಹೊಂದಿದೆ. ಆದರೆ, ಇವರು ಬೀದರ್&zwnj; ಜಿಲ್ಲೆಯ ಬೋಂತಿ ತಾಂಡಾ ಮೂಲದವರೆಂದು ರಹವಾಸಿ ಪತ್ರ ಪಡೆದು, ಲಂಬಾಣಿ ಸಮಾಜ ಇಲ್ಲಿ ಹೊಂದಿರುವ ಪರಿಶಿಷ್ಟ ಜಾತಿ (ಎಸ್&zwnj;ಸಿ) ಮೀಸಲು ಸೌಲಭ್ಯದ ಮೇಲೆ 2008ರಿಂದ ಔರಾದ್&zwnj; ಕ್ಷೇತ್ರದ ಶಾಸಕರಾಗುತ್ತಿದ್ದಾರೆ. ಮೀಸಲು ಸೌಲಭ್ಯ ದುರ್ಬಳಕೆ ಮಾಡಿಕೊಂಡ ಇವರ ಶಾಸಕತ್ವ ಅನರ್ಹಗೊಳಿಸಬೇಕೆಂದು ನರಸಿಂಗ ತುಕಾರಾಮ ಎಂಬುವರು ಹೈಕೋರ್ಟ್&zwnj;ನ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್&zwnj; ಪೀಠ, ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ತುಕಾರಾಮ ಅವರು, ಸುಪ್ರೀಂಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಿದ್ದರು.&lt;/p&gt;&lt;p&gt;ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್&zwnj; ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ, ಸತೀಶಚಂದ್ರ ಶರ್ಮಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಈ ಮೇಲ್ಮನವಿ ಅರ್ಜಿಯನ್ನು (2026ರ ಮೇ 6ರಂದು) ವಜಾಗೊಳಿಸಿದೆ.&lt;/p&gt;&lt;p&gt;ಚವ್ಹಾಣ್&zwnj; ಅವರ ಜಾತಿ ಮೂಲ ಮತ್ತು ಮೂಲ ನಿವಾಸದ ಬಗ್ಗೆ ಕ್ಯಾತೆ ತೆಗೆದು ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ್&zwnj; ಮತ್ತು ಬೀದರ್&zwnj;ನ ರವೀಂದ್ರ ಕಲ್ಲಯ್ಯ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು 2023ರ ಮೇ 1ರಂದು ಸುಪ್ರೀಂಕೋರ್ಟ್&zwnj; ವಜಾಗೊಳಿಸಿತ್ತು.&lt;/p&gt;&lt;h3&gt;ನಾನು ಕನ್ನಡಿಗ: ಚವ್ಹಾಣ್&zwnj;&lt;/h3&gt;&lt;p&gt;ನಾನು ಕನ್ನಡಿಗ, ಕರ್ನಾಟಕದವನು. ಇಲ್ಲೇ ಹುಟ್ಟಿ, ಬೆಳೆದಿದ್ದೇನೆ. ವಿನಾಕಾರಣ ನನ್ನ ಜಾತಿ, ನಿವಾಸದ ಮೂಲ ಕೆದಕಿ ವಿವಾದ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಹೈಕೋರ್ಟ್&zwnj; ಎರಡು ಸಲ ನನ್ನ ಪರವಾಗಿ ತೀರ್ಪು ಕೊಟ್ಟಿದೆ. ಇದೀಗ ಸುಪ್ರೀಂಕೋರ್ಟ್&zwnj; ಸಹ ಮತ್ತೊಮ್ಮೆ ನನ್ನ ವಿರುದ್ಧದ ಅರ್ಜಿ ವಜಾಗೊಳಿಸಿದೆ. ಇದು ಸತ್ಯಮೇವ ಜಯತೆ ಎಂದು ಶಾಸಕ ಚವ್ಹಾಣ್ ಪ್ರತಿಕ್ರಿಯಿಸಿದ್ದಾರೆ.&lt;/p&gt;&lt;p&gt;ಚವ್ಹಾಣ್&zwnj; ಅವರ ಜನ್ಮಸ್ಥಳ, ವಿದ್ಯಾಭ್ಯಾಸ, ಎಸ್&zwnj;ಸಿ ಜಾತಿ ಪ್ರಮಾಣಪತ್ರ ಸ್ವೀಕಾರ, ಮತದಾರರ ಪಟ್ಟಿಯಲ್ಲಿನ ಹೆಸರು... ಹೀಗೆ ಎಲ್ಲದರ ಪರಿಶೀಲನೆ ನಡೆಸಿದ ವೇಳೆ ಇವರು ಸ್ಥಳೀಯರು ಹಾಗೂ ಲಂಬಾಣಿ ಎಸ್&zwnj;ಸಿ ಸಮಾಜದವರು ಎಂಬುದು ಸ್ಪಷ್ಟವಾಗಿದೆ. ಈ ಸಂಬಂಧ ಹೈಕೋರ್ಟ್&zwnj;ನ ಕಲಬುರಗಿ ಪೀಠ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವೇ ಇಲ್ಲ. ಈ ಮೇಲ್ಮನವಿ ರಾಜಕೀಯ ಪ್ರೇರಿತವಾಗಿದ್ದು, ಪ್ರತೀಕಾರದ ಹೊರತಾಗಿ ಬೇರೆ ಉದ್ದೇಶವೇನನ್ನೂ ಹೊಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/mla-chavan-caste-dispute-supreme-court-delivers-major-judgment-rav/articleshow-5y5foeq"/>
        </item>
        <item>
            <title><![CDATA[ಕರ್ನಾಟಕ ಮಣ್ಣಲ್ಲಿ ಜಪಾನ್‌ 'ಮಿಯಾಜಾಕಿ' ಕಮಾಲ್: ಕೊಪ್ಪಳ ಬಳಿಕ ಬೀದರ್‌ನಲ್ಲೂ ದುಬಾರಿ ಮಾವು? ರೇಟ್ ಸಿಕ್ಕಿದ್ದೆಷ್ಟು?]]></title>
            <link>https://kannada.asianetnews.com/gallery/karnataka-districts/world-s-costliest-miyazaki-mango-now-grown-in-bidar-karnataka-check-price-and-details-sat-6g7g80y</link>
            <guid isPermaLink="true">https://kannada.asianetnews.com/gallery/karnataka-districts/world-s-costliest-miyazaki-mango-now-grown-in-bidar-karnataka-check-price-and-details-sat-6g7g80y</guid>
            <pubDate>Fri, 22 May 2026 16:37:01 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರೈತರೊಬ್ಬರು ಜಪಾನ್ ಮೂಲದ, ವಿಶ್ವದ ಅತ್ಯಂತ ದುಬಾರಿ ಮಿಯಾಜಾಕಿ ಮಾವನ್ನು ತಮ್ಮ ಹೊಲದಲ್ಲಿ ಪ್ರಾಯೋಗಿಕವಾಗಿ ಬೆಳೆದು ಯಶಸ್ವಿಯಾಗಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಹಣ್ಣಿಗೆ, ಸ್ಥಳೀಯ ಮಾರುಕಟ್ಟೆ ಸಿಗದಿರುವುದು ಸವಾಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks7mzsqgab1q6bfhpnxv7ncy,imgname-bidar-miyazaki-mango-1779447097072.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರೈತರೊಬ್ಬರು ಜಪಾನ್ ಮೂಲದ, ವಿಶ್ವದ ಅತ್ಯಂತ ದುಬಾರಿ ಮಿಯಾಜಾಕಿ ಮಾವನ್ನು ತಮ್ಮ ಹೊಲದಲ್ಲಿ ಪ್ರಾಯೋಗಿಕವಾಗಿ ಬೆಳೆದು ಯಶಸ್ವಿಯಾಗಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಈ ಹಣ್ಣಿಗೆ, ಸ್ಥಳೀಯ ಮಾರುಕಟ್ಟೆ ಸಿಗದಿರುವುದು ಸವಾಲಾಗಿದೆ.&lt;/p&gt;&lt;img&gt;&lt;p&gt;ಜಗತ್ತಿನ ಹಣ್ಣುಗಳ ರಾಜ ಮಾವಿನ ಹಣ್ಣಿನಲ್ಲಿ ಜಪಾನ್ ಮೂಲದ ಮಿಯಾಜಾಕಿ ಹಣ್ಣು ನಿಜಕ್ಕೂ ರಾಜರಲ್ಲಿ ರಾಜ ಎಂದು ಹೇಳಬಹುದು. ಕಾರಣ ಈ ಮಿಯಾಜಾಕಿ ಹಣ್ಣಿಗೆ 1 ಕೆಜಿಗೆ 2.5 ಲಕ್ಷ ರೂ. ಎಂದು ಹೇಳುತ್ತಾರೆ. ಆದರೆ, ಭಾರತದ ರೈತರು ಈವರೆಗೆ 10 ಸಾವಿರ ರೂ. ಕೆಜಿ ಮಾರಾಟ ಮಾಡಿದ್ದನ್ನೂ ಯಾರೂ ನೋಡಿಲ್ಲ.&lt;/p&gt;&lt;p&gt;ಹೀಗಿರುವಾಗ, ಕೊಪ್ಪಳದಲ್ಲಿ ಮಿಯಾಜಾಕಿ ಮಾವಿನ ಹಣ್ಣು ಬೆಳೆದು ಕೇವಲ 3 ಸಾವಿರ ರೂ.ಗೆ ಒಂದು ಕೆಜಿ ಹಣ್ಣು ಮಾರಾಟ ಮಾಡಿ ಕೈ ಸುಟ್ಟುಕೊಂಡಿದ್ದನು. ಇದೀಗ ಬೀದರ್&zwnj;ನಲ್ಲಿಯೂ ಮತ್ತೊಬ್ಬ ರೈತ ಮಿಯಾಜಾಕಿ ಮಾವು ಬೆಳೆದು ಸುದ್ದಿಗೆ ಬಂದಿದ್ದಾರೆ. ಅವರ ಕುರಿತ ವಿಶೇಷ ಮಾಹಿತಿ ಇಲ್ಲಿದೆ ನೋಡಿ.&lt;/p&gt;&lt;img&gt;&lt;p&gt;ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತರು ಈ ಅಪರೂಪದ ಸಾಹಸಕ್ಕೆ ಕೈಹಾಕಿದ್ದಾರೆ. ಇವರು ಜಪಾನ್ ದೇಶದಿಂದಲೇ ನೇರವಾಗಿ ಈ ಮಿಯಾಜಾಕಿ ಮಾವಿನ ಗಿಡಗಳನ್ನು ತರಿಸಿ, ತಮ್ಮ ಹೊಲದಲ್ಲಿ ಪ್ರಾಯೋಗಿಕವಾಗಿ 4 ಗಿಡಗಳನ್ನು ನಾಟಿ ಮಾಡಿದ್ದರು. ಈಗ ಈ ಗಿಡಗಳಲ್ಲಿ ಹಣ್ಣುಗಳು ಸಮೃದ್ಧವಾಗಿ ಬಂದಿವೆ.&lt;/p&gt;&lt;img&gt;&lt;p&gt;ಈ ಮಾವಿನ ಹಣ್ಣುಗಳು ಸಾಮಾನ್ಯ ಮಾವಿಗಿಂತ ಹೆಚ್ಚು ಸಿಹಿಯಾಗಿದ್ದು, ಗಾಢ ಕೆಂಪು ಬಣ್ಣದಿಂದ ಕೂಡಿವೆ. ಒಂದೊಂದು ಹಣ್ಣು ಸುಮಾರು 200 ರಿಂದ 500 ಗ್ರಾಂವರೆಗೆ ತೂಕ ಬರುತ್ತದೆ. ಸದ್ಯಕ್ಕೆ ಇದನ್ನು ಮನೆಯ ಬಳಕೆಗಾಗಿ ಬೆಳೆದಿದ್ದರೂ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಸುವ ಇರಾದೆ ರೈತರದ್ದಾಗಿದೆ.&lt;/p&gt;&lt;img&gt;&lt;p&gt;ಅಂತಹ ಅದ್ಭುತ ಮತ್ತು ದುಬಾರಿ 'ಮಿಯಾಜಾಕಿ' (Miyazaki Mango) ಮಾವಿನ ಹಣ್ಣು ಈಗ ಕರ್ನಾಟಕದ ಮಣ್ಣಿನಲ್ಲಿಯೂ ಬೆಳೆಯುತ್ತಿದೆ. ಕೊಪ್ಪಳದ ಬಳಿಕ ಇದೀಗ ಗಡಿ ಜಿಲ್ಲೆ ಬೀದರ್&zwnj;ನ ರೈತರು ಈ ಅತಿ ದುಬಾರಿ ಮಾವು ಬೆಳೆದು ಸುದ್ದಿಯಾಗಿದ್ದಾರೆ. ಇದೀಗ ಪ್ರಾಯೋಗಿಕ ಬೆಳೆ ಯಶಸ್ವಿ ಆಗಿದ್ದು, ಹೆಚ್ಚಿನ ಗಿಡ ಬೆಳೆಯಲು ಉತ್ಸುಕರಾಗಿದ್ದಾರೆ.&lt;/p&gt;&lt;img&gt;&lt;p&gt;ಬೀದರ್&zwnj;ಗಿಂತ ಮೊದಲು ಕೊಪ್ಪಳ ಜಿಲ್ಲೆಯ ನಾಗಪ್ಪ ಬಗನಾಳ ಎಂಬ ರೈತರು ಈ ಮಿಯಾಜಾಕಿ ಮಾವನ್ನು ಬೆಳೆದು ಸದ್ದು ಮಾಡಿದ್ದರು. ಕಲ್ ತಾವರಗೇರಾ ಗ್ರಾಮದ ನಾಗಪ್ಪ ಅವರು 2 ಎಕರೆ ಪ್ರದೇಶದಲ್ಲಿ ಬರೋಬ್ಬರಿ 180 ಗಿಡಗಳನ್ನು ಬೆಳೆಸಿದ್ದಾರೆ. ಮೂರು ವರ್ಷಗಳ ಹಿಂದೆ ದೆಹಲಿಯಿಂದ ರೈಲು ಮೂಲಕ ಸಸಿಗಳನ್ನು ತರಿಸಿದ್ದ ಅವರು, ಪ್ರತಿ ಸಸಿಗೆ 1,300 ರೂಪಾಯಿ ವೆಚ್ಚ ಮಾಡಿದ್ದರು.&lt;/p&gt;&lt;img&gt;&lt;p&gt;ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಿಯಾಜಾಕಿ ಮಾವಿನ ಹಣ್ಣಿಗೆ ಕೆಜಿಗೆ 2.50 ಲಕ್ಷ ರೂಪಾಯಿ ಬೆಲೆ ಇದೆ. ಇದನ್ನು ಜಪಾನ್&zwnj;ನಲ್ಲಿ 'ಸೂರ್ಯನ ಮೊಟ್ಟೆ' (Egg of the Sun) ಎಂದು ಕರೆಯಲಾಗುತ್ತದೆ. ಆದರೆ, ನಮ್ಮ ಸ್ಥಳೀಯ ಮಾರುಕಟ್ಟೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಬೆಲೆ ಸಿಗುತ್ತಿಲ್ಲ ಎಂಬುದು ರೈತರ ಅಳಲು. ಕೊಪ್ಪಳದ ಮಾವು ಮೇಳದಲ್ಲಿ ಈ ಹಣ್ಣು ಕೆಜಿಗೆ ಕೇವಲ 3 ಸಾವಿರ ರೂಪಾಯಿಗೆ ಮಾರಾಟವಾಗಿದೆ. ವಿಶ್ವದ ಅತ್ಯಂತ ದುಬಾರಿ ಹಣ್ಣನ್ನು ಬೆಳೆದರೂ, ಅದಕ್ಕೆ ತಕ್ಕ ಮಾರುಕಟ್ಟೆ ಇಲ್ಲದಿರುವುದು ರೈತರಿಗೆ ದೊಡ್ಡ ಸವಾಲಾಗಿದೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/world-s-costliest-miyazaki-mango-now-grown-in-bidar-karnataka-check-price-and-details-sat-6g7g80y"/>
        </item>
        <item>
            <title><![CDATA[ಬಂಗಾರದ ಮನುಷ್ಯನ ಸೈಕಲ್ ಸವಾರಿ ಹಿಂದಿದೆ ರಹಸ್ಯ; ಮೋದಿ ಮಾತಿನಿಂದ ಐಷಾರಾಮಿ ಕಾರಿಗೆ ಟಾಟಾ ಹೇಳಿದ ಚಿನ್ನದ ವ್ಯಾಪಾರಿ!]]></title>
            <link>https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747</link>
            <guid isPermaLink="true">https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747</guid>
            <pubDate>Fri, 15 May 2026 17:53:52 +0530</pubDate>
            <description><![CDATA[&lt;p&gt;ಬಸವಕಲ್ಯಾಣದ ಚಿನ್ನದ ವ್ಯಾಪಾರಿ ರೇವಣಪ್ಪ, ಪ್ರಧಾನಿ ಮೋದಿಯವರ ಇಂಧನ ಉಳಿತಾಯದ ಕರೆಯಿಂದ ಪ್ರೇರಿತರಾಗಿ, ತಮ್ಮ ಐಷಾರಾಮಿ ಕಾರನ್ನು ಬಿಟ್ಟು ಸೈಕಲ್&zwnj;ನಲ್ಲಿ ಅಂಗಡಿಗೆ ತೆರಳುತ್ತಿದ್ದಾರೆ. ಅವರ ಈ ನಡೆ ಇಂಧನ ಉಳಿತಾಯ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರುತ್ತಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krns5kncv3nc2nzhfznhpdtt,imgname-bidar-jewellery-shop-owner-1778847501996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ 15): ಇಂ&lt;/strong&gt;ದಿನ ಕಾಲದಲ್ಲಿ ಶ್ರೀಮಂತಿಕೆ ಎಂದರೆ ಐಷಾರಾಮಿ ಕಾರುಗಳು, ಬೈಕುಗಳು ಮತ್ತು ವೈಭವದ ಜೀವನ. ಅದರಲ್ಲೂ ಚಿನ್ನದ ಅಂಗಡಿಯ ಮಾಲೀಕರು ಅಂದಮೇಲೆ ಅವರ ಜೀವನಶೈಲಿ ಹೇಗಿರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಬೀದರ್ ಜಿಲ್ಲೆಯ ಬಸವಕಲ್ಯಾಣದ ಚಿನ್ನದ ವ್ಯಾಪಾರಿಯೊಬ್ಬರು ಇದಕ್ಕೆ ಅಪವಾದ ಎಂಬಂತೆ ನಡೆದುಕೊಂಡು ಎಲ್ಲರ ಗಮನ ಸೆಳೆಯುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಐಷಾರಾಮಿ ಕಾರು ಬಿಟ್ಟು ಸೈಕಲ್ ಮೊರೆ:&lt;/strong&gt;&lt;/h3&gt;&lt;p&gt;ಬಸವಕಲ್ಯಾಣ ನಗರದಲ್ಲಿ ಬಂಗಾರದ ಅಂಗಡಿ ಹೊಂದಿರುವ ರೇವಣಪ್ಪ ಅವರು ಪ್ರತಿದಿನ ತಮ್ಮ ಐಷಾರಾಮಿ ಕಾರಿನಲ್ಲೇ ಅಂಗಡಿಗೆ ತೆರಳುತ್ತಿದ್ದರು. ಆದರೆ, ಇಂದು ರೇವಣಪ್ಪ ಅವರು ತಮ್ಮ ಕಾರು ಮತ್ತು ಬೈಕುಗಳನ್ನು ಮನೆಯಲ್ಲೇ ಬಿಟ್ಟು ಸೈಕಲ್ ತುಳಿಯುತ್ತಾ ಅಂಗಡಿಗೆ ಬಂದಿದ್ದಾರೆ. ಸುಡುವ ಬಿಸಿಲನ್ನೂ ಲೆಕ್ಕಿಸದೆ ಸುಮಾರು 2 ಕಿಲೋಮೀಟರ್ ಸೈಕಲ್ ತುಳಿದು ಅವರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಧಾನಿ ಮೋದಿ ಮಾತೇ ಪ್ರೇರಣೆ:&lt;/strong&gt;&lt;/h2&gt;&lt;p&gt;ರೇವಣಪ್ಪ ಅವರು ಇಂತಹದೊಂದು ನಿರ್ಧಾರ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಪ್ರೇರಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಇಂಧನ ಉಳಿಸುವುದು ಅತ್ಯಂತ ಅವಶ್ಯಕವಾಗಿದೆ. ಪ್ರಧಾನಿ ಮೋದಿ ಅವರು ಇಂಧನ ಉಳಿತಾಯದ ಬಗ್ಗೆ ನೀಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ರೇವಣಪ್ಪ, &quot;ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆಯೂ ಮುಖ್ಯ. ನಾವು ಇಂಧನ ಉಳಿಸಿದರೆ ಅದು ದೇಶದ ಆರ್ಥಿಕತೆಗೆ ಸಹಾಯವಾಗುತ್ತದೆ. ಹೀಗಾಗಿ ಇಂದಿನಿಂದ ಸೈಕಲ್ ಮೂಲಕವೇ ಸಂಚರಿಸಲು ನಿರ್ಧರಿಸಿದ್ದೇನೆ&quot; ಎಂದು ಹೆಮ್ಮೆಯಿಂದ ಹೇಳಿದ್ದಾರೆ.&lt;/p&gt;&lt;h3&gt;&lt;strong&gt;ಆರೋಗ್ಯ ಮತ್ತು ಪರಿಸರ ಎರಡಕ್ಕೂ ಲಾಭ:&lt;/strong&gt;&lt;/h3&gt;&lt;p&gt;ಕೇವಲ ಇಂಧನ ಉಳಿತಾಯ ಮಾತ್ರವಲ್ಲದೆ, ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿಸುತ್ತದೆ ಮತ್ತು ಪರಿಸರ ಮಾಲಿನ್ಯವೂ ಕಡಿಮೆಯಾಗುತ್ತದೆ ಎಂಬ ಸಂದೇಶವನ್ನು ರೇವಣಪ್ಪ ನೀಡಿದ್ದಾರೆ. ಬಸವಕಲ್ಯಾಣದ ರಸ್ತೆಯಲ್ಲಿ ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು ಸೈಕಲ್ ತುಳಿಯುತ್ತಿರುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಲ್ಲದೆ, ಅವರ ಸರಳತೆ ಮತ್ತು ದೇಶಪ್ರೇಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ದೇಶದ ಹಿತಕ್ಕಾಗಿ ಸಣ್ಣ ಬದಲಾವಣೆ ಮಾಡಿಕೊಳ್ಳುವುದು ದೊಡ್ಡ ವಿಷಯವಲ್ಲ. ನಾವೆಲ್ಲರೂ ವಾರದಲ್ಲಿ ಕನಿಷ್ಠ ಒಂದು ದಿನವಾದರೂ ಇಂಧನ ಬಳಸದ ವಾಹನಗಳನ್ನು ಅಥವಾ ಸೈಕಲ್ ಬಳಸಿದರೆ ದೇಶಕ್ಕೆ ದೊಡ್ಡ ಲಾಭವಾಗಲಿದೆ'ಎಂಬುದು ರೇವಣಪ್ಪ ಅವರ ಮನವಿಯಾಗಿದೆ. ಬಸವಕಲ್ಯಾಣದ ಈ ಬಂಗಾರದ ವ್ಯಾಪಾರಿಯ ನಡೆ ಈಗ ಸೋಷಿಯಲ್ ಮೀಡಿಯಾದಲ್ಲೂ ಸಖತ್ ವೈರಲ್ ಆಗುತ್ತಿದೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747"/>
        </item>
        <item>
            <title><![CDATA[ಬೀದರ್‌ನಲ್ಲಿ ಅಚ್ಚರಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ, ಅಮ್ಮನಿಗಿದು ಎರಡನೇ ಹೆರಿಗೆ]]></title>
            <link>https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq</link>
            <guid isPermaLink="true">https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq</guid>
            <pubDate>Fri, 24 Apr 2026 18:04:48 +0530</pubDate>
            <description><![CDATA[ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಬಸಮ್ಮ ಎಂಬ ಮಹಿಳೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಮ್ಮ ಎರಡನೇ ಹೆರಿಗೆಯಲ್ಲಿ ಎರಡು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಸದ್ಯ ನವಜಾತ ಶಿಶುಗಳನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpzqez8ewsswy3539n93fhth,imgname-bidar-woman-delivers-triplets-1777033772302.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್&lt;/strong&gt; ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ಬ್ರಿಮ್ಸ್ (Bidar Institute of Medical Sciences) ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಒಂದೇ ಬಾರಿ ಮೂರು ಮಕ್ಕಳಿಗೆ ಜನ್ಮ ನೀಡಿರುವುದು ಗಮನಸೆಳೆದಿದೆ.&lt;/p&gt;&lt;p&gt;ಹುಮನಾಬಾದ್ ತಾಲೂಕಿನ ವಡ್ಡನಕೇರಾ ಗ್ರಾಮದ ಬಸಮ್ಮ ಎಂಬ ಮಹಿಳೆ ಈ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದಾರೆ. ಈಗಾಗಲೇ ಒಂದು ಮಗುವಿಗೆ ಜನ್ಮ ನೀಡಿದ್ದ ಬಸಮ್ಮ, ತನ್ನ ಎರಡನೇ ಹೆರಿಗೆಯ ಸಂದರ್ಭದಲ್ಲಿ ಈ ಬಾರಿ ಮೂರು ಮಕ್ಕಳಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ.&lt;/p&gt;&lt;h2&gt;ಯಶಸ್ವಿ ಹೆರಿಗೆ&lt;/h2&gt;&lt;p&gt;ಬಸಮ್ಮ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಯಶಸ್ವಿ ಹೆರಿಗೆ ನಡೆದಿದೆ. ಈ ವೇಳೆ ಅವರು ಎರಡು ಗಂಡು ಮಕ್ಕಳಿಗೂ ಒಂದು ಹೆಣ್ಣು ಮಗುವಿಗೂ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯರು ತಕ್ಷಣವೇ ಅಗತ್ಯ ಚಿಕಿತ್ಸೆ ಒದಗಿಸಿದ್ದಾರೆ.&lt;/p&gt;&lt;h2&gt;ಆರೋಗ್ಯವಾಗಿರುವ ಮಗು&lt;/h2&gt;&lt;p&gt;ಪ್ರಸ್ತುತ, ಮೂರು ನವಜಾತ ಶಿಶುಗಳನ್ನು ತುರ್ತು ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಮಕ್ಕಳು ಮತ್ತು ತಾಯಿಯ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ.&lt;/p&gt;&lt;p&gt;ಈ ಅಪರೂಪದ ಘಟನೆ ಕುಟುಂಬದಲ್ಲಿ ಸಂತಸ ಮೂಡಿಸಿದ್ದು, ಸ್ಥಳೀಯರಲ್ಲಿ ಕುತೂಹಲಕ್ಕೂ ಕಾರಣವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿಯೂ ಇಂತಹ ಘಟನೆಗಳು ಅಪರೂಪವಾಗಿರುವುದರಿಂದ, ವೈದ್ಯರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq"/>
        </item>
        <item>
            <title><![CDATA[ಪ್ರಿಯಾಂಕ್ ಖರ್ಗೆಗೆ ಡಿಸಿಎಂ ನೀಡುವಂತೆ ದೇಗುಲದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!]]></title>
            <link>https://kannada.asianetnews.com/gallery/politics/priyank-kharge-supporters-special-pooja-veerabhadreshwar-temple-demand-dcm-post-rav-ch5w05k</link>
            <guid isPermaLink="true">https://kannada.asianetnews.com/gallery/politics/priyank-kharge-supporters-special-pooja-veerabhadreshwar-temple-demand-dcm-post-rav-ch5w05k</guid>
            <pubDate>Sun, 31 May 2026 12:48:57 +0530</pubDate>
            <description><![CDATA[&lt;p&gt;ಪ್ರಿಯಾಂಕ್ ಖರ್ಗೆ ಅವರಿಗೆ ಹೊಸ ಸರ್ಕಾರ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲೇಬೇಕು ಎಂದು ಬೀದರ್&zwnj;ನಲ್ಲಿ ಅಭಿಮಾನಿಗಳು ದೇಗುಲಗಳಲ್ಲಿ 101 ತೆಂಗಿನಕಾಯಿಗಳನ್ನ ಹೊಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹೈಕಮಾಂಡ್&zwnj;ಗೆ &amp;nbsp;ಒತ್ತಾಯಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ksycmtjcg3w9g4kwmrkhywkv,imgname-----------------------2026-05-31t121657.592-1780210100812.jpg" type="image/jpeg" height="390" width="690"/>
            <content:encoded><![CDATA[&lt;p&gt;ಪ್ರಿಯಾಂಕ್ ಖರ್ಗೆ ಅವರಿಗೆ ಹೊಸ ಸರ್ಕಾರ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲೇಬೇಕು ಎಂದು ಬೀದರ್&zwnj;ನಲ್ಲಿ ಅಭಿಮಾನಿಗಳು ದೇಗುಲಗಳಲ್ಲಿ 101 ತೆಂಗಿನಕಾಯಿಗಳನ್ನ ಹೊಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹೈಕಮಾಂಡ್&zwnj;ಗೆ &amp;nbsp;ಒತ್ತಾಯಿಸಿದರು.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ಸಿಎಲ್&zwnj;ಪಿ ನಾಯಕನ ಆಯ್ಕೆಯ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಉಪಮುಖ್ಯಮಂತ್ರಿ (ಡಿಸಿಎಂ), ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಹುದ್ದೆಗಳಿಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ವಿವಿಧ ಬಣಗಳ ನಾಯಕರು ತಮಗೆ ಬೇಕಾದ ಸ್ಥಾನಗಳಿಗಾಗಿ ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ. ಕೆಲ ಪ್ರಭಾವಿ ನಾಯಕರು ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಲಾಬಿ ನಡೆಸುತ್ತಿದ್ದರೆ, ಇನ್ನು ಹಲವರು ರಾಜ್ಯದ ಪ್ರಮುಖ ನಾಯಕರಾದ ಸಿದ್ದರಾಮಯ್ಯ(Siddaramaiah) ಮತ್ತು ಡಿ.ಕೆ. ಶಿವಕುಮಾರ್(DK Shivakumar) ಅವರಿಗೆ ದುಂಬಾಲು ಬಿದ್ದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಈ ಬಾರಿ ಪ್ರಿಯಾಂಕ್ ಖರ್ಗೆ(Priyank kharge) ಅವರಿಗೆ ಡಿಸಿಎಂ(DCM) ಹುದ್ದೆ ನೀಡಬೇಕು ಎಂಬ ತೀವ್ರ ಒತ್ತಾಯ ಕೇಳಿಬರುತ್ತಿದೆ.&lt;/p&gt;&lt;img&gt;&lt;p&gt;ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಪಟ್ಟ ಹಾಗೂ ಎಂಎಲ್&zwnj;ಸಿ ಚಂದ್ರಶೇಖರ್ ಪಾಟೀಲ್(MLC Chandrashekhar patil) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯಲ್ಲಿ ಅಭಿಮಾನಿಗಳು ಹಲವು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆಗಳನ್ನು ಆರಂಭಿಸಿದ್ದಾರೆ. ಬೀದರ್&zwnj;ನ ಹುಮನಾಬಾದ್&zwnj;ನಲ್ಲಿರುವ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಬಳಿಕ ಪ್ರಿಯಾಂಕ್ ಖರ್ಗೆ ಡಿಸಿಎಂ ಸಿಗಲೆಂದು ಬರೋಬ್ಬರಿ 101 ತೆಂಗಿನಕಾಯಿಗಳನ್ನು ಒಡೆದು ಈಡೇರಿಕೆಗಾಗಿ ದೇವರಲ್ಲಿ ಮೊರೆ ಇಟ್ಟಿದ್ದಾರೆ.&lt;/p&gt;&lt;img&gt;&lt;p&gt;ಹುಮನಾಬಾದ್&zwnj;ನ ಮತ್ತೊಂದು ಪುರಾತನ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲೂ ಅಭಿಮಾನಿಗಳು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ವಿಶೇಷ ಅರ್ಚನೆ ಮಾಡಿಸಿದರು. ಪ್ರಿಯಾಂಕ್ ಖರ್ಗೆ ಮತ್ತು ಚಂದ್ರಶೇಖರ್ ಪಾಟೀಲ್ ಅವರ ಭಾವಚಿತ್ರಗಳನ್ನು ಹಿಡಿದು ದೇವಸ್ಥಾನದ ಆವರಣದಲ್ಲಿ ಜಯಘೋಷಗಳನ್ನು ಕೂಗಲಾಯಿತು. ಇಬ್ಬರೂ ನಾಯಕರು ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಉನ್ನತ ಜವಾಬ್ದಾರಿಗಳನ್ನು ನಿಭಾಯಿಸಲು ಸಮರ್ಥರಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂದು ಒತ್ತಾಯಿಸಿದರು.&lt;/p&gt;&lt;img&gt;&lt;p&gt;ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರ ಸಹೋದರ ಹಾಗೂ ಪ್ರಸ್ತುತ ಎಂಎಲ್&zwnj;ಸಿ ಆಗಿರುವ ಚಂದ್ರಶೇಖರ್ ಪಾಟೀಲ್ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಕಡ್ಡಾಯವಾಗಿ ಸ್ಥಾನ ನೀಡಬೇಕು ಎಂಬ ಒತ್ತಾಯ ಜಿಲ್ಲೆಯಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಂಎಲ್&zwnj;ಸಿ ಚಂದ್ರಶೇಖರ್ ಪಾಟೀಲ್ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಯುವಕರ, ಪದವೀಧರರ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಬೆಂಬಲಿಗರು ಹೈಕಮಾಂಡ್&zwnj;ಗೆ ಆಗ್ರಹಿಸಿದ್ದಾರೆ.&lt;/p&gt;&lt;img&gt;&lt;p&gt;ಮತ್ತೊಂದೆಡೆ, ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ನಾಯಕ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಅಭಿಮಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕ್ಷೇತ್ರದಾದ್ಯಂತ ಮತ್ತು ರಾಜ್ಯ ಮಟ್ಟದಲ್ಲಿ ಅವರು ಮಾಡುತ್ತಿರುವ ಜನಪರ ಕೆಲಸಗಳನ್ನು ಗಮನಿಸಿ, ಅವರಿಗೆ ಈ ಬಾರಿ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಯನ್ನು ನೀಡಲೇಬೇಕು ಎಂದು ಬೀದರ್ ನಾಯಕರು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಇಡೀ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ರಾಜಕೀಯ ಬಲ ಸಿಗಲಿದ್ದು, ಪಕ್ಷದ ಸಂಘಟನೆಗೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.&lt;/p&gt;]]></content:encoded>
            <category>bidar</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/politics/priyank-kharge-supporters-special-pooja-veerabhadreshwar-temple-demand-dcm-post-rav-ch5w05k"/>
        </item>
        <item>
            <title><![CDATA[ಜೂನ್‌ನಿಂದ ಬೀದರ್‌-ಕಲಬುರಗಿಗೆ ಬೆಂಗ್ಳೂರಿಂದ ವಿಮಾನ ಸೇವೆ ಪುನರಾರಂಭ; ಮುಂಗಡ ಬುಕ್ಕಿಂಗ್ ಶುರು]]></title>
            <link>https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1</link>
            <guid isPermaLink="true">https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1</guid>
            <pubDate>Sat, 23 May 2026 05:14:13 +0530</pubDate>
            <description><![CDATA[ಕಲ್ಯಾಣ ಕರ್ನಾಟಕ ಭಾಗದ ಬೀದರ್&zwnj; ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನರಾರಂಭಗೊಳ್ಳಲಿದೆ. ಸ್ಟಾರ್&zwnj; ಏರ್&zwnj;ಲೈನ್ಸ್&zwnj; ಈ ಸೇವೆಯನ್ನು ಒದಗಿಸಲಿದ್ದು, ಪ್ರಾದೇಶಿಕ ಸಂಪರ್ಕ ವೃದ್ಧಿಸುವ ಉದ್ದೇಶದಿಂದ ಸರ್ಕಾರವು ವಯಾಬಲಿಟಿ ಗ್ಯಾಪ್&zwnj; ಫಂಡಿಂಗ್&zwnj; ಮೂಲಕ ಆರ್ಥಿಕ ಬೆಂಬಲ ನೀಡುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks911arvcb7n05wjsvjc0j7p,imgname-airport-1779493284635.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಕಲ್ಯಾಣ ಕರ್ನಾಟಕ ಭಾಗದ ಬೀದರ್&zwnj; ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ಕ್ರಮವಾಗಿ ಜೂ.1 ಮತ್ತು ಜೂ.10ರಿಂದ ವಿಮಾನಯಾನ ಸೇವೆ ಪುನರಾರಂಭಿಸಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಾರ್&zwnj; ಏರ್&zwnj;ಲೈನ್ಸ್&zwnj; ಸಂಸ್ಥೆಯು ಬೆಂಗಳೂರಿನಿಂದ ಬೀದರ್&zwnj;, ಕಲಬುರಗಿಗೆ ವಿಮಾನಯಾನ ಸೇವೆ ಒದಗಿಸಲಿದೆ. ಅದಕ್ಕೆ ಬೆಂಬಲ ನೀಡಲು ಸರ್ಕಾರವು 28.47 ಕೋಟಿ ರು.ಗಳನ್ನು ವಯಾಬಲಿಟಿ ಗ್ಯಾಪ್&zwnj; ಫಂಡಿಂಗ್&zwnj; ಆಗಿ ಕೊಡುತ್ತಿದೆ. ಎರಡೂ ಕರೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್&zwnj; ಆರಂಭಿಸಲಾಗಿದೆ ಎಂದರು.&lt;/p&gt;&lt;h2&gt;&lt;strong&gt;ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮ&lt;/strong&gt;&lt;/h2&gt;&lt;p&gt;ಈ ಹಿಂದೆ ಕಲಬುರಗಿಗೆಯಿದ್ದ ವಿಮಾನಸೇವೆ ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್&zwnj;ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವಿಶೇಷ ನೆರವಿನಿಂದ ಒಂದು ವಿಮಾನ ಸೇವೆ ನೀಡಲಾಗುತ್ತಿತ್ತು. ಅದೂ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಬೆಳವಣಿಗೆ ಪರಿಗಣಿಸಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮದಡಿ ವಿಮಾನ ಸೇವೆ ಮತ್ತೆ ಆರಂಭಿಸಲಾಗುತ್ತಿದೆ. ಅಲ್ಲದೆ, ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಿಗೆ ವಿಮಾನ ಸಂಪರ್ಕ ಒದಗಿಸಬೇಕು ಎನ್ನುವುದು ಸರ್ಕಾರದ ಕಾಳಜಿಯಾಗಿದೆ. ಅದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಜತೆಗೆ ಮೂಲಸೌಕರ್ಯ ಕೂಡ ಸುಧಾರಿಸಲಿದೆ ಎಂದು ವಿವರಿಸಿದರು.&lt;/p&gt;&lt;p&gt;&amp;nbsp;&lt;/p&gt;&lt;p&gt;ಜೂನ್ 1ರಿಂದ ಬೀದರ್ ಗೆ, ಜೂನ್ 10ರಿಂದ ಕಲಬುರಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ!ಕಲ್ಯಾಣ ಕರ್ನಾಟಕ ಭಾಗದ ಬೀದರ್ ಹಾಗೂ ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನಾರಂಭಿಸಲಾಗುವುದು.ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು&hellip; pic.twitter.com/Kr2tJyaH4u&lt;/p&gt;&lt;p&gt;&mdash; M B Patil (@MBPatil) May 22, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/travel/flight-service-from-bengaluru-to-bidar-kalaburagi-to-start-from-june-mrq/articleshow-e330gq1"/>
        </item>
        <item>
            <title><![CDATA[ಮಹಾರಾಷ್ಟ್ರದಿಂದ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್: ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ]]></title>
            <link>https://kannada.asianetnews.com/karnataka-districts/illegal-sand-transport-bidar-minister-eshwar-khandre-statement-gvd/articleshow-e5aiztv</link>
            <guid isPermaLink="true">https://kannada.asianetnews.com/karnataka-districts/illegal-sand-transport-bidar-minister-eshwar-khandre-statement-gvd/articleshow-e5aiztv</guid>
            <pubDate>Wed, 27 May 2026 22:29:00 +0530</pubDate>
            <description><![CDATA[&lt;p&gt;ಕಾಳ ಸಂತೆಯಲ್ಲಿ ಮಾರಾಟ ಮಾಡಲು ತಯಾರಿ ಮಾಡಿಕೊಂಡ ಮರಳು ದಂಧೆಯ ಕುರಿತಂತೆ ಕ್ರಮ ಕೈಗೊಂಡು, ಈ ಕುರಿತಾಗಿ ಸಮಗ್ರ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಬೀದರ್&zwnj; ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jzb06m75gr600cw7r5hv56hr,imgname-karnataka-forest-minister-eshwar-khandre--file-photoani--1751642231012.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಔರಾದ್&zwnj; (ಮೇ.27): &lt;/strong&gt;ಮಹಾರಾಷ್ಟ್ರದಿಂದ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯಿಂದ ರಸ್ತೆಗಳು ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತ ದುಬಾರಿ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲು ತಯಾರಿ ಮಾಡಿಕೊಂಡ ಮರಳು ದಂಧೆಯ ಕುರಿತಂತೆ ಕ್ರಮ ಕೈಗೊಂಡು, ಈ ಕುರಿತಾಗಿ ಸಮಗ್ರ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಬೀದರ್&zwnj; ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.&lt;/p&gt;&lt;p&gt;ಮಹಾರಾಷ್ಟ್ರದ ನಾಂದೇಡ್&zwnj; ಜಿಲ್ಲೆಯ ದೆಗಲೂರ ತಾಲೂಕಿನ ಹಣೆಗಾಂವ್&zwnj; ಮೂಲಕ ಔರಾದ್&zwnj; ತಾಲೂಕಿನ ವನಮಾರಪಳ್ಳಿ ಗ್ರಾಮದ ಚೆಕ್&zwnj;ಪೋಸ್ಟ್&zwnj; ಮೂಲಕ ಭಾರಿ ಮರಳನ್ನು ಹೊತ್ತ ವಾಹನಗಳ ಓಡಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸೋಮವಾರ ತಡರಾತ್ರಿಯಿಂದಲೇ ಚೆಕ್&zwnj; ಪೋಸ್ಟ್&zwnj;ನಲ್ಲಿ ಖಡಕ್&zwnj; ಆದೇಶ ರವಾನೆ ಯಾಗಿದೆ. ಒಂದೇ ಒಂದು ಮರಳು ಹೊತ್ತ ವಾಹನ ಗಡಿ ಪ್ರವೇಶ ಮಾಡದಂತೆ ಎಚ್ಚರಿಸಲಾಗಿದೆ. ಹೀಗಾಗಿ ಮಂಗಳವಾರದವರೆಗೆ ವನಮಾರಪಳ್ಳಿ ಗಡಿಗೆ ಹೊಂದಿಕೊಂಡು ನೂರಾರು ಮರಳು ಹೊತ್ತ ಟಿಪ್ಪರ್&zwnj;ಗಳು ರಾಜ್ಯದ ಗಡಿ ಪ್ರವೇಶ ಮಾಡಲು ಬಕಪಕ್ಷಿಯಂತೆ ಕಾಯುತ್ತ ಕುಳಿತಿರುವ ದೃಶ್ಯ ಕಂಡು ಬಂದಿದೆ.&lt;/p&gt;&lt;p&gt;&lt;strong&gt;ಡಿಸಿಗೆ ಉಸ್ತುವಾರಿ ಸಚಿವರು ಬರೆದ ಪತ್ರದಲ್ಲೆನಿದೆ ?&lt;/strong&gt;&lt;/p&gt;&lt;p&gt;ಕಳೆದ ಒಂದು ವಾರದಿಂದ &lsquo;ಕನ್ನಡಪ್ರಭ&rsquo; ಮರಳು ಮಾಯೆ ಎಂಬ ತಲೆ ಬರಹದಡಿಯಲ್ಲಿ ವಿಸ್ತೃತವಾಗಿ ವರದಿ ಮಾಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನೆರೆ ರಾಜ್ಯದಿಂದ ಬೀದರ್&zwnj;ಗೆ ಬಂದಿರುವ ಮರಳಿನ ಲಾರಿಗಳು ರಸ್ತೆಯಲ್ಲೆ ನಿಂತಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿದೆ ಇದರ ಜೊತೆಗೆ ರಸ್ತೆಯಲ್ಲಿ ಮರಳು ರಾಶಿ ಹಾಕಿ ದಾಸ್ತಾನು ಮಾಡಲಾಗಿರುವ ಕಾರಣ ದಿಂದಲೂ ಸಂಚಾರ ಸಮಸ್ಯೆ ಉದ್ಭವಿಸಿದೆ. ಇದರ ಜೊತೆಗೆ ಇಷ್ಟೆಲ್ಲ ಅಕ್ರಮ ಮರಳು ಸಾಗಾಟವಾಗ್ತಿದ್ದರು ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ ಎಂಬ ಆರೋಪ ಇದ್ದು ಕೂಡಲೆ ಜಿಲ್ಲಾಡಳಿತ ಈ ಬಗ್ಗೆ ಪರಿಶಿಲಿಸಿ ಜನರಿಗೆ ತೊಂದರೆಯಾಗದಂತೆ ಮತ್ತು ಅಕ್ರಮಗಳಿಗೆ ಅವಕಾಶ ನೀಡದಂತೆ ಕೈಗೊಂಡಿರುವ ಕ್ರಮದ ವರದಿಯನ್ನು ಮೂರು ದಿನಗಳಲ್ಲಿ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಲ್ಲಗೆ ಜಿಲ್ಲಾ ಪೊಲೀಸರ್&zwnj; ವರಿಷ್ಠಾಧಿಕಾರಿಗಳಿಗೂ ಪ್ರತಿಯನ್ನು ಲಗತ್ತಿಸಲಾಗಿದೆ.&lt;/p&gt;&lt;p&gt;&lt;strong&gt;ಚೆಕ್&zwnj; ಪೋಸ್ಟ್&zwnj; ಬಿಗಿ&lt;/strong&gt;&lt;/p&gt;&lt;p&gt;ಮಹಾರಾಷ್ಟ್ರದಿಂದ ಜಿಲ್ಲೆಗೆ ಪ್ರವೇಶ ಮಾಡುವ ಅಕ್ರಮ ಮರಳಿನ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ ಪೊಲೀಸರು ಗಡಿಯ ಚೆಕ್&zwnj;ಪೋಸ್ಟ್&zwnj;ಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಒಂದು ಲಾರಿ ಕೂಡ ಗಡಿ ಪ್ರವೇಶ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ವನಮಾರಪಳ್ಳಿ, ಮುರ್ಕಿ, ಚಿಂತಾಕಿ ಹಾಗೂ ಕಮಲನಗರ ಚೆಕ್&zwnj;ಪೊಸ್ಟ್&zwnj; ಗಳು ಸಕ್ರೀಯವಾಗಿವೆ ಎಂದು ಮೂಲಗಳು ಮಾಹಿತಿ ನೀಡಿವೆ.&lt;/p&gt;&lt;h2&gt;&lt;strong&gt;ಮರಳು ದಾಸ್ತಾನು ಮೇಲೆ ದಾಳಿ ಯಾಕಿಲ್ಲ?&lt;/strong&gt;&lt;/h2&gt;&lt;p&gt;ಮಹಾರಾಷ್ಟ್ರದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡಿರುವ ಕೆಲವರು ಗಡಿ ಭಾಗದ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ಗುಡ್ಡೆ ಹಾಕಿಕೊಂಡು ಕಾಳ ಸಂತೆಯಲ್ಲಿ ದುಬಾರಿ ಬೆಲೆಗೆ ಮರಳು ಮಾರಾಟ ಮಾಡಲು ತಯಾರಿ ಮಾಡಿಕೊಂಡಿದ್ದಾರೆ. ವನಮಾರಪಳ್ಳಿ ಗ್ರಾಮದ ಗಡಿಗೆ ಹೊಂದಿಕೊಂಡಿರುವ ಹೆದ್ದಾರಿಯ ಎರಡೂ ಬದಿ ಯಲ್ಲಿ ನೂರಕ್ಕೂ ಅಧಿಕ ಲೋಡ್&zwnj; ಮರಳು ದಾಸ್ತಾನು ಮಾಡಲಾಗಿದೆ.&lt;/p&gt;&lt;p&gt;ಪಟ್ಟಣದ ನಾರಾಯಣಪೂರ್&zwnj; ರಸ್ತೆಯ ಲೇ ಔಟ್&zwnj;, ಅಮರೇಶ್ವರ ಕಾಲೇಜು, ದತ್ತ ಮಂದಿರ ಪಕ್ಕ, ಎಪಿಎಂಸಿ ಯಾರ್ಡ್&zwnj;, ಎಕಂಬಾ, ಭಂಡಾರಕುಮಠಾ, ಶಿವಪೂರ್&zwnj;, ಡೊಣಗಾಂವ್&zwnj;, ಚೊಂಡಿಮುಖೇಡ, ಡಿಗ್ಗಿ ಸೇರಿದಂತೆ ಹಲವು ಗ್ರಾಮಗಳ ಸಿಕ್ಕ ಸಿಕ್ಕಲ್ಲಿ ಅಕ್ರಮ ಮರಳಿನ ದಾಸ್ತಾನು ಇದ್ದರೂ ಸಂಬಂಧಿತ ಇಲಾಖಾ ಅಧಿಕಾರಿಗಳು ದಾಳಿ ನಡೆಸುವದಿರಲಿ ಮರಳು ಸಮಿತಿಗೆ ಶಿಫಾರಸ್ಸು ಮಾಡಲು ಹಿಂದೇಟು ಹಾಕುತ್ತಿರುವದರ ಹಿಂದಿನ ಮರ್ಮವೇನು ಎಂದು ಜನರ ಅನುಮಾನಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ನಂತರ ಮರಳಿನ ಲಾರಿಗಳ ಓಡಾಟ ಸ್ಥಗಿತವಾದರೂ ದಾಸ್ತಾನು ಮಾಡಿದ ಮರಳಿನ ಮೇಲಿನ ಮಾಯೆ ಮಾತ್ರ ಕಮ್ಮಿಯಾಗ್ತಿಲ್ಲ. ಅಷ್ಟಕ್ಕೂ ಸಚಿವರ ಖಡಕ್&zwnj; ಪತ್ರಕ್ಕೆ ಜಿಲ್ಲಾಧಿಕಾರಿಗಳು ವರದಿ ನೀಡ್ತಾರೆಯೇ ಎಂಬುವದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>bidar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/illegal-sand-transport-bidar-minister-eshwar-khandre-statement-gvd/articleshow-e5aiztv"/>
        </item>
        <item>
            <title><![CDATA[ಸಿಲಿಂಡರ್‌ಗೆ ಮಧ್ಯರಾತ್ರಿಯಿಂದ್ಲೇ ಕ್ಯೂ, ಪೆಟ್ರೋಲ್‌ ‘ನೋ ಸ್ಟಾಕ್‌’! ಭಾಲ್ಕಿ, ಬಳ್ಳಾರಿಯಲ್ಲಿ ಜನರ ಪರದಾಟ]]></title>
            <link>https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug</link>
            <guid isPermaLink="true">https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug</guid>
            <pubDate>Mon, 18 May 2026 06:04:12 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ರಾಜ್ಯದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಬೀದರ್&zwnj;ನ ಭಾಲ್ಕಿಯಲ್ಲಿ ಗ್ಯಾಸ್&zwnj; ಸಿಲಿಂಡರ್&zwnj;ಗಳಿಗಾಗಿ ಹಾಗೂ ಬಳ್ಳಾರಿಯಲ್ಲಿ ಪೆಟ್ರೋಲ್&zwnj;ಗಾಗಿ ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3rwv0hk7vmf4gw4kkkdtwq,imgname-save-gas-cylinder-life--1--1778243234833.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಾಲ್ಕಿ/ಬಳ್ಳಾರಿ: &lt;/strong&gt;ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಇಂಧನ ಹಾಗೂ ಎಲ್&zwnj;ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೀದರ್&zwnj; ಜಿಲ್ಲೆಯ ಭಾಲ್ಕಿಯಲ್ಲಿ ಗ್ಯಾಸ್&zwnj; ಸಿಲಿಂಡರ್&zwnj;ಗೆ ಹಾಗೂ ಬಳ್ಳಾರಿಯಲ್ಲಿ ಪೆಟ್ರೋಲ್&zwnj;ಗಾಗಿ ಜನರು ಪರದಾಡುವಂತಾಗಿದೆ.&lt;/p&gt;&lt;h2&gt;&lt;strong&gt;ಸುಮಾರು 1 ಕಿಲೋ ಮೀಟರ್&zwnj; ಸಾಲು&lt;/strong&gt;&lt;/h2&gt;&lt;p&gt;ಗ್ಯಾಸ್&zwnj; ಸಿಲಿಂಡರ್ ಸಿಗುತ್ತೋ, ಇಲ್ಲವೋ ಎಂಬ ಆತಂಕದಲ್ಲಿ ಭಾನುವಾರ ಬೆಳ್ಳಂ ಬೆಳಗ್ಗೆ ಭಾಲ್ಕಿ ಪಟ್ಟಣದ ಭಾರತ್&zwnj; ಗ್ಯಾಸ್&zwnj; ಏಜೆನ್ಸಿಯ ಕಚೇರಿ ಮುಂದೆ ನೂರಾರು ಗ್ರಾಹಕರು ಜಮಾಯಿಸಿದ್ದು, ಗ್ಯಾಸ್&zwnj; ಸಿಲಿಂಡರ್&zwnj;ಗಳನ್ನು ಕ್ಯೂನಲ್ಲಿ ಇಟ್ಟಿದ್ದರು. ಸುಮಾರು 1 ಕಿಲೋ ಮೀಟರ್&zwnj; ದೂರದವರೆಗೆ ಸಿಲಿಂಡರ್&zwnj;ಗಳು ಸರತಿ ಸಾಲಿನಲ್ಲಿಟ್ಟಿದ್ದು ಕಂಡು ಬಂತು.&lt;/p&gt;&lt;p&gt;ಹಲವರು ಮಧ್ಯರಾತ್ರಿಯಿಂದಲೇ ಸಿಲಿಂಡರ್&zwnj; ಪಡೆಯಲು ಸಾಲುಗಟ್ಟಿ ನಿಂತ&zwnj;ರೆ, ಮಹಿಳೆಯರು, ವೃದ್ಧರು ತಮ್ಮ, ತಮ್ಮ ಖಾಲಿ ಸಿಲಿಂಡರ್&zwnj; ಮೇಲೆಯೇ ಕುಳಿತುಕೊಂಡು ಸಮಯ ಕಳೆದಿದ್ದಾರೆ. ಭಾಲ್ಕಿಯಲ್ಲಿ ಭಾರತ್&zwnj; ಗ್ಯಾಸ್&zwnj;ನ ಒಂದೇ ಒಂದು ಏಜೆನ್ಸಿ ಇರುವ ಕಾರಣ ಸಿಲಿಂಡರ್&zwnj; ಕೊರತೆಯಿಂದ ಜನರು ಪರದಾಡುವಂತಾಗಿದೆ. ನೂರಾರು ಜನ ಸೇರಿದ್ದರಿಂದ ಪೊಲೀಸರನ್ನು ಕರೆಸಿ, ಎಲ್ಲರಿಗೂ ಸಿಲಿಂಡರ್&zwnj; ಸಿಗುವಂತೆ ಮಾಡಲಾಯಿತು.&lt;/p&gt;&lt;h3&gt;&lt;strong&gt;ಹೊಸ ಬೈಕ್&zwnj;ಗೂ ಸಿಗಲಿಲ್ಲ ಪೆಟ್ರೋಲ್&lt;/strong&gt;&lt;/h3&gt;&lt;p&gt;ಬಳ್ಳಾರಿಯ ಎಚ್&zwnj;.ಪಿ.ಪೆಟ್ರೋಲ್&zwnj; ಬಂಕ್&zwnj;ನಲ್ಲಿ ಪೆಟ್ರೋಲ್&zwnj; ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಹೊಸ ಬೈಕ್&zwnj; ಖರೀದಿಸಿದ್ದ ಗ್ರಾಹಕನೊಬ್ಬ ಪೆಟ್ರೋಲ್&zwnj; ಸಿಗದೆ ಸುಮಾರು 2 ಕಿ.ಮೀ. ದೂರ ಬೈಕ್&zwnj; ತಳ್ಳಿಕೊಂಡು ಬಂದಿದ್ದ. ಭಾನುವಾರ ಬೆಳಗ್ಗೆಯಿಂದಲೇ ಸ್ಟಾಕ್&zwnj; ಇಲ್ಲದೆ, ಬಂಕನ್ನು ಬಂದ್&zwnj; ಮಾಡಲಾಗಿತ್ತು.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug"/>
        </item>
        <item>
            <title><![CDATA[ಕಮರ್ಷಿಯಲ್ ಗ್ಯಾಸ್ ಬೆಲೆ ₹993 ಏರಿಕೆ; ಸಂಕಷ್ಟದಲ್ಲಿ ಹೋಟೆಲ್  ಉದ್ದಿಮೆ, ತಿಂಡಿ ಬೆಲೆ ಇನ್ನಷ್ಟು ಹೆಚ್ಚಳದ ಬಗ್ಗೆ ಚರ್ಚೆ!]]></title>
            <link>https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i</link>
            <guid isPermaLink="true">https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i</guid>
            <pubDate>Sat, 02 May 2026 05:02:12 +0530</pubDate>
            <description><![CDATA[&lt;p&gt;Hotel Gas Up by ₹993 ಬೀದರ್&zwnj;ನಲ್ಲಿ ಕಮರ್ಷಿಯಲ್ ಎಲ್&zwnj;ಪಿಜಿ ಗ್ಯಾಸ್ ಬೆಲೆ ₹993 ಏರಿಕೆಯಾಗಿದ್ದು, ಹೊಟೇಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ತಿಂಡಿ ತಿನಿಸುಗಳ ಬೆಲೆ ಹೆಚ್ಚಿಸಿದ್ದು, ಮತ್ತೊಮ್ಮೆ ಬೆಲೆ ಏರಿಕೆ ಮಾಡಿದರೆ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqjy3ng1fng86cnwfn8mwqw4,imgname-----------------------2026-05-02t050057.673-1777678276097.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ (ಮೇ.2): ದೇಶಾದ್ಯಂತ ಕಮರ್ಷಿಯಲ್ ಎಲ್&zwnj;ಪಿಜಿ ಗ್ಯಾಸ್ ಬೆಲೆ ಏರಿಕೆ ಶುಕ್ರವಾರದಿಂದ ಜಾರಿಯಾದ ಹಿನ್ನೆಲೆ ಜಿಲ್ಲೆಯ ಹೊಟೇಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ.&lt;/p&gt;&lt;p&gt;ಏಕಾಏಕಿ ಕಮರ್ಷಿಯಲ್ ಗ್ಯಾಸ್ ಬೆಲೆ 993 ಏರಿಕೆ ಮಾಡಿದ್ದು, ಬೆಳಂಬೆಳಗ್ಗೆ ಹೊಟೇಲ್ ಮಾಲಿಕರಿಗೆ ಶಾಕ್ ಆಗಿದೆ. ಈಗಾಗಲೇ ಬೆಳಗಿನ ಉಪಾಹಾರ ಸೇರಿದಂತೆ ಹೊಟೇಲ್ ತಿಂಡಿಯ ಬೆಲೆ 15 ರಿಂದ 20 ರು. ಏರಿಕೆ ಮಾಡಲಾಗಿದೆ. ಈಗ ಮತ್ತೆ ಬೆಲೆ ಹೆಚ್ಚಳ ಮಾಡಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವುದಂತೂ ಗ್ಯಾರಂಟಿ ಎನ್ನುತ್ತಾರೆ ಹೊಟೇಲ್&zwnj; ಮಾಲೀಕರು.&lt;/p&gt;&lt;p&gt;ಇರಾನ್ - ಇಸ್ರೇಲ್ ವಾರ್ ಎಫೆಕ್ಟ್&zwnj;ನಿಂದ ಇಂಧನ ಪೂರೈಕೆ ವ್ಯತ್ಯಯದಿಂದ ಬೆಲೆ ಏರಿಕೆಯಾಗುತ್ತಿದ್ದು, ಕಳೆದ ಮೂರು ತಿಂಗಳಲ್ಲಿ ಸತತ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಳ ಆಗಿದೆ. ಮಾರ್ಚ್&zwnj; ತಿಂಗಳಿನಲ್ಲಿ 144 ರು. ಏಪ್ರಿಲ್&zwnj;ನಲ್ಲಿ 190 ಹಾಗೂ ಈಗ 993 ರು. ಏರಿಕೆಯಾಗಿದೆ. ಹೀಗೆ ಸತತ ಗ್ಯಾಸ್ ದರ ಏರಿಕೆಯಿಂದ ಹೊಟೇಲ್ ಉದ್ಯಮಕ್ಕೆ ದೊಡ್ಡ ಹೊರೆ ಬಿದ್ದಿದ್ದು, ಹೋಟೆಲ್ ಉದ್ಯಮ ನಡೆಸೋದಕ್ಕೂ ಕಷ್ಟ ಆಗ್ತಿದೆ ಎನ್ನುತ್ತಾರೆ ಮಾಲಿಕರು.&lt;/p&gt;&lt;p&gt;ಗ್ಯಾಸ್ ಬೆಲೆ ಹೆಚ್ಚಳದಿಂದ ಹೋಟೆಲ್ ಮುಚ್ಚಿದರೂ ಬಾಡಿಗೆ ಕಟ್ಟಬೇಕು. ಕಾರ್ಮಿಕರಿಗೆ ವೇತನ ನೀಡಬೇಕು. ನಾವು ಏನು ಮಾಡಬೇಕು ತಿಳಿಯುತ್ತಿಲ್ಲ. ಹೊಟೇಲ್ ಮಾಲಿಕರ ಸಂಘದ ಸಭೆ ನಡೆಸಿ ಅದರಲ್ಲಿ ತಿಂಡಿಯ ಬೆಲೆ ಹೆಚ್ಚಳ ಮಾಡಬೇಕು. ಎನ್ನುವುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೊಟೇಲ್ ಮಾಲೀಕ ಮೂರ್ತಿ ಹೇಳಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i"/>
        </item>
        <item>
            <title><![CDATA[ಕಸಾಯಿಖಾನೆಗೆ ಸಾಗಿಸುತ್ತಿದ್ದ ಲಾರಿ ಅಡ್ಡಗಟ್ಟಿ 23 ಹಸು ರಕ್ಷಿಸದ ಶಾಸಕ ಶರಣು ಸಲಗರ; ಒಂದು ಎತ್ತು ಸಾವು]]></title>
            <link>https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v</link>
            <guid isPermaLink="true">https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v</guid>
            <pubDate>Sun, 26 Apr 2026 11:12:22 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 23ಕ್ಕೂ ಹೆಚ್ಚು ಜಾನುವಾರುಗಳನ್ನು ಬಸವಕಲ್ಯಾಣ ಶಾಸಕ ಶರಣು ಸಲಗರ ರಕ್ಷಿಸಿದ್ದಾರೆ. 3 ಗೂಡ್ಸ್ ವಾಹನಗಳಲ್ಲಿ ಅಮಾನವೀಯವಾಗಿ ತುಂಬಿದ್ದರಿಂದ ಉಸಿರುಗಟ್ಟಿ ಒಂದು ಎತ್ತು ಸಾವನ್ನಪ್ಪಿದ್ದು, ಶಾಸಕರು ದಂಧೆಕೋರರ ವಿರುದ್ಧ ದೂರು ದಾಖಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq44tj6f4hz3arbfqe4exjt4,imgname-screenshot-2026-04-26-110103-1777182001358.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಏ.26): ಜಿ&lt;/strong&gt;ಲ್ಲೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಜಾಲ ಮತ್ತೆ ಹೆಡೆಎತ್ತುತ್ತಿದ್ದು, ಇಂದು ಸ್ವತಃ ಶಾಸಕರೊಬ್ಬರು ರಸ್ತೆಗಿಳಿದು ಅಕ್ರಮ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ಅವರು ಮೂರು ಗೂಡ್ಸ್ ವಾಹನಗಳ ಮೇಲೆ ಧಿಡೀರ್ ದಾಳಿ ನಡೆಸಿ, ಅಮಾನವೀಯವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 23ಕ್ಕೂ ಅಧಿಕ ಜಾನುವಾರುಗಳನ್ನು ರಕ್ಷಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಚಿಟ್ಟಾ ಕ್ರಾಸ್ ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಮೂರು ಗೂಡ್ಸ್ ವಾಹನಗಳಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಶರಣು ಸಲಗರ್ ಅವರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ತಡೆದರು. ಈ ವೇಳೆ ವಾಹನಗಳನ್ನು ಪರಿಶೀಲಿಸಿದಾಗ ಅಲ್ಲಿನ ದೃಶ್ಯ ಅತ್ಯಂತ ಮನಕಲಕುವಂತಿತ್ತು.&lt;/p&gt;&lt;h2&gt;&lt;strong&gt;ಉಸಿರುಗಟ್ಟಿ ಪ್ರಾಣ ಬಿಟ್ಟ ಎತ್ತು:&lt;/strong&gt;&lt;/h2&gt;&lt;p&gt;ಆಕಳುಗಳು, ಕರುಗಳು, ಎತ್ತುಗಳು ಹಾಗೂ ಎಮ್ಮೆ ಕರುಗಳನ್ನು ಯಾವುದೇ ಕನಿಷ್ಠ ನಿಯಮಗಳನ್ನು ಪಾಲಿಸದೆ, ಉಸಿರುಗಟ್ಟುವಂತೆ ವಾಹನಗಳಲ್ಲಿ ತುರುಕಲಾಗಿತ್ತು. ಕೇವಲ ಒಂದು ವಾಹನದಲ್ಲಿ ಮಿತಿಮೀರಿದ ಅಂದರೆ ಆರು ದೊಡ್ಡ ಜಾನುವಾರುಗಳನ್ನು ತುಂಬಿದ್ದರಿಂದ, ಗಾಳಿ ಸಿಗದೆ ಎತ್ತುವೊಂದು ವಾಹನದಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಚಾಲಕರಿಗೆ ಶಾಸಕರಿಂದ ಕ್ಲಾಸ್:&lt;/strong&gt;&lt;/h2&gt;&lt;p&gt;ಜಾನುವಾರುಗಳ ಮೇಲಿನ ಕ್ರೌರ್ಯ ಕಂಡ ಶಾಸಕ ಸಲಗರ್ ಚಾಲಕರ ಮೇಲೆ ಕೆಂಡಾಮಂಡಲರಾದರು. &quot;ಹೊಟ್ಟೆ ತುಂಬಿಸಿಕೊಳ್ಳಲು ಬೇರೆ ಕೆಲಸ ಮಾಡಿ, ಈ ರೀತಿ ಮೂಕ ಪ್ರಾಣಿಗಳನ್ನು ಕೊಲ್ಲುವುದು ಎಷ್ಟು ಸರಿ? ನಿಮ್ಮ ಹೆಂಡತಿ, ಮಕ್ಕಳನ್ನು ಇದೇ ರೀತಿ ಅಮಾನವೀಯವಾಗಿ ವಾಹನದಲ್ಲಿ ತುಂಬಿ ಸಾಗಿಸ್ತೀರಾ? ಪ್ರಾಣಿಗಳ ಮೇಲೆ ಯಾಕಿಷ್ಟು ಕ್ರೌರ್ಯ?&quot; ಎಂದು ಚಾಲಕರನ್ನು ತರಾಟೆಗೆ ತೆಗೆದುಕೊಂಡರು.&lt;/p&gt;&lt;p&gt;ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, &quot;ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದಲೇ ಇಂತಹ ಅಕ್ರಮ ದಂಧೆಕೋರರಿಗೆ ಲೈಸೆನ್ಸ್ ಸಿಕ್ಕಂತಾಗಿದೆ. ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ&quot; ಎಂದು ದೂರಿದರು.&lt;/p&gt;&lt;p&gt;&lt;strong&gt;ಪೊಲೀಸ್ ಕ್ರಮ:&lt;/strong&gt;&lt;/p&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಮಂಠಾಳ ಪೊಲೀಸ್ ಠಾಣೆಯ ಪಿಎಸ್ಐ ಸುವರ್ಣ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶರಣು ಸಲಗರ್ ಅವರು ಅಕ್ರಮ ದಂಧೆಕೋರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ರಕ್ಷಿಸಲಾದ 23 ಜಾನುವಾರುಗಳನ್ನು ತಕ್ಷಣವೇ ಹತ್ತಿರದ ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.&lt;/p&gt;&lt;p&gt;ಬೀದರ್ ಜಿಲ್ಲೆಯ ಗಡಿ ಭಾಗಗಳಲ್ಲಿ ಇಂತಹ ಅಕ್ರಮ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v"/>
        </item>
        <item>
            <title><![CDATA[ಬೀದರ್‌ನಲ್ಲೊಂದು ಮನುಕುಲವೇ ತಲೆತಗ್ಗಿಸುವ ಘಟನೆ ಚರಂಡಿಯಲ್ಲಿ ಆಗಷ್ಟೇ ಹುಟ್ಟಿದ ಶಿಶುವಿನ ಶವ ಪತ್ತೆ!]]></title>
            <link>https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h</link>
            <guid isPermaLink="true">https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h</guid>
            <pubDate>Mon, 11 May 2026 21:15:49 +0530</pubDate>
            <description><![CDATA[ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ, ಕಿರಾಣಿ ಅಂಗಡಿಯ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಹುಟ್ಟಿದ ಮಗುವನ್ನು ರಾತ್ರೋರಾತ್ರಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಅಮಾನವೀಯ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krbv4z28fsdbe85ab3g1pd44,imgname-bidar-newborn-baby-case--1--1778514033687.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್: &lt;/strong&gt;ಜೀವನದಲ್ಲಿ ಅದೆಷ್ಟೋ ಜನ ಮಕ್ಕಳಿಲ್ಲದೆ ಕೊರಗುತ್ತಿದ್ದಾರೆ. ಅದೆಷ್ಟೋ ಮಂದಿ ಮಕ್ಕಳನ್ನು ಪಡೆಯಲು ವರ್ಷಾನುಗಟ್ಟಲೆ ಚಿಕಿತ್ಸೆ ತೆಗೆದುಕೊಳ್ಳುತ್ತಾರೆ. ಇನ್ನು ಕೆಲವರು ಐವಿಎಫ್ ಮೊರೆ ಹೋಗುತ್ತಿದ್ದಾರೆ. ಆದರೆ ಇಂತಹ ಸನ್ನಿವೆಶದ ನಡುವೆ ಬೀದರ್&zwnj; ನಲ್ಲಿ ಮನುಕುಲವೇ ತಲೆತಗ್ಗಿಸುವ ಹೃದಯವಿದ್ರಾವಕ ಘಟನೆ ನಡೆದಿದೆ. ಇಲ್ಲಿನ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಬಸವೇಶ್ವರ ವೃತ್ತದ ಸಮೀಪ ಇರುವ ಕಿರಾಣಿ ಅಂಗಡಿ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಹೆತ್ತವರು ಮಾನವೀಯತೆಯನ್ನು ಮರೆತು ಮಗುವನ್ನು ಬೀದಿ ಹೆಣ ಮಾಡಿದ್ದಾರೆ.&lt;/p&gt;&lt;h2&gt;ಚರಂಡಿಯಲ್ಲಿ ಕಾಣಿಸಿದ ಅನುಮಾನಾಸ್ಪದ ವಸ್ತು&lt;/h2&gt;&lt;p&gt;ಸ್ಥಳೀಯರು ಬೆಳಿಗ್ಗೆ ಚರಂಡಿಯಲ್ಲಿ ಏನೋ ಅನುಮಾನಾಸ್ಪದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ನವಜಾತ ಶಿಶುವಿನ ಶವ ಕಂಡುಬಂದಿದೆ. ಈ ದೃಶ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹುಲಸೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.&lt;/p&gt;&lt;p&gt;ಮೃತ ಶಿಶಿವಿನ ಹೊಕ್ಕಳ ಬಳ್ಳಿ ಇನ್ನೂ ಹಸಿಯಾಗಿಯೇ ಇತ್ತು. ಆಗಷ್ಟೇ ಹುಟ್ಟಿದ ಮಗುವನ್ನು ರಾತ್ರೋರಾತ್ರಿ ಚರಂಡಿಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಜನನದ ವಿಚಾರವನ್ನು ಮುಚ್ಚಿಡಲು ಈ ಅಮಾನವೀಯ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧದಲ್ಲಿ ಈ ಮಗು ಜನಿಸಿರಬಹುದೆಂಬ ಶಂಕೆ ಕೂಡ ಇದೆ.&lt;/p&gt;&lt;h2&gt;ಸಾರ್ವಜನಿಕರ ತೀವ್ರ ಆಕ್ರೋಶ&lt;/h2&gt;&lt;p&gt;ಈ ಘಟನೆ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಿದ್ದು, ಹೆತ್ತ ಮಗುವನ್ನೇ ತ್ಯಜಿಸಿರುವ ಪೋಷಕರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಜನಿಸಿದ ತಕ್ಷಣವೇ ಅದನ್ನು ತ್ಯಜಿಸಿ ಚರಂಡಿಗೆ ಎಸೆದಿರುವುದು ಮನುಕುಲವೇ ತಲೆತಗ್ಗಿಸುವ ಸಂಗತಿ. ಘಟನೆ ಸಂಬಂಧ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವನ್ನು ಚರಂಡಿಗೆ ಎಸೆದವರು ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ, ಈ ದುರ್ಘಟನೆ ಸಮಾಜದಲ್ಲಿ ಮಾನವೀಯತೆ ಕುಗ್ಗುತ್ತಿರುವುದಕ್ಕೆ ಕನ್ನಡಿ ಹಿಡಿದಂತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳ ಅಗತ್ಯವಿದೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h"/>
        </item>
        <item>
            <title><![CDATA[Bidar BRIMS hospital crime: ಪೋಸ್ಟ್‌ ಮಾರ್ಟ್‌ಮ್‌ ವೇಳೆ ಹೆಣ್ಣು ಶವಗಳ ಬೆತ್ತಲೆ ಚಿತ್ರ ಸೆರೆಹಿಡಿಯುತ್ತಿದ್ದ ಅಟೆಂಡರ್ ಅರೆಸ್ಟ್]]></title>
            <link>https://kannada.asianetnews.com/crime/bidar-brims-attender-arrested-for-capturing-female-body-nude-photos-during-post-mortems-rav/articleshow-ly6kkc5</link>
            <guid isPermaLink="true">https://kannada.asianetnews.com/crime/bidar-brims-attender-arrested-for-capturing-female-body-nude-photos-during-post-mortems-rav/articleshow-ly6kkc5</guid>
            <pubDate>Sat, 30 May 2026 09:12:01 +0530</pubDate>
            <description><![CDATA[ಬೀದರ್&zwnj;ನ ಬ್ರಿಮ್ಸ್&zwnj; ಆಸ್ಪತ್ರೆಯ ಶವಾಗಾರದಲ್ಲಿ, ಪೋಸ್ಟ್&zwnj;ಮಾರ್ಟ್&zwnj;ಮ್&zwnj; ವೇಳೆ ಮಹಿಳಾ ಮೃತದೇಹಗಳ ಬೆತ್ತಲೆ ಚಿತ್ರಗಳನ್ನು ತೆಗೆಯುತ್ತಿದ್ದ ಅಟೆಂಡರ್&zwnj;ನನ್ನು ಬಂಧಿಸಲಾಗಿದೆ. ಆಸ್ಪತ್ರೆ ಆಡಳಿತ ಮಂಡಳಿ ದೂರು ನೀಡಿದ ನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvf511ys88d1qmvq5ffjhpk,imgname-----------------------2026-05-30t090355.165-1780112065598.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್&zwnj;ನ ಬ್ರಿಮ್ಸ್&zwnj; (BRIMS) ಜಿಲ್ಲಾಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಶವಾಗಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಟೆಂಡರ್&zwnj;ನೊಬ್ಬ ಪೋಸ್ಟ್&zwnj;ಮಾರ್ಟ್&zwnj;ಮ್&zwnj; ವೇಳೆ ಮಹಿಳಾ ಮೃತದೇಹಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್&zwnj;ನಲ್ಲಿ ಸೆರೆಹಿಡಿಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ.&lt;/p&gt;&lt;p&gt;ಆರೋಪಿ ಮುನೀರ್&zwnj; ಅಹ್ಮದ್&zwnj; ಹಲವು ವರ್ಷಗಳಿಂದ ಆಸ್ಪತ್ರೆಯ ಶವಾಗಾರ ವಿಭಾಗದಲ್ಲಿ ಅಟೆಂಡರ್&zwnj; ಆಗಿ ಕೆಲಸ ಮಾಡುತ್ತಿದ್ದಾನೆ. ಪೋಸ್ಟ್&zwnj;ಮಾರ್ಟ್&zwnj;ಮ್&zwnj; ಪ್ರಕ್ರಿಯೆ ನಡೆಯುವ ವೇಳೆ ಮಹಿಳಾ ಶವಗಳ ಫೋಟೋಗಳನ್ನು ರಹಸ್ಯವಾಗಿ ತೆಗೆದು ಸಂಗ್ರಹಿಸಿಡುತ್ತಿದ್ದನೆಂಬ ವಿಚಾರ ತಿಳಿದು ಆಸ್ಪತ್ರೆ ಸಿಬ್ಬಂದಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಮಾಹಿತಿಯ ಪ್ರಕಾರ, ಆರೋಪಿಯ ಮೊಬೈಲ್&zwnj; ಫೋನ್&zwnj; ಪರಿಶೀಲಿಸಿದಾಗ ಹಲವು ಮಹಿಳಾ ಮೃತದೇಹಗಳ ಬೆತ್ತಲೆ ಚಿತ್ರಗಳು ಪತ್ತೆಯಾಗಿವೆ. ಇದರಿಂದ ಆತ ಹಲವು ವರ್ಷಗಳಿಂದ ಇದೇ ರೀತಿಯ ವಿಕೃತ ಕೃತ್ಯ ಎಸಗುತ್ತಿದ್ದಾನೆಯೇ ಎಂಬ ಅನುಮಾನ ಮೂಡಿದ್ದು, ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;p&gt;ಪ್ರಕರಣದ ಗಂಭೀರತೆಯನ್ನು ಮನಗಂಡ ಬ್ರಿಮ್ಸ್&zwnj; ಮುಖ್ಯಸ್ಥ ಡಾ. ಮೊಸಿನ್&zwnj; ಉಲ್&zwnj; ಹಕ್&zwnj; ಅವರು ನ್ಯೂಟೌನ್&zwnj; ಪೊಲೀಸ್&zwnj; ಠಾಣೆಗೆ ಅಧಿಕೃತ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಮುನೀರ್&zwnj; ಅಹ್ಮದ್&zwnj;ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಸ್ಪತ್ರೆಯಂತಹ ಸೂಕ್ಷ್ಮ ಮತ್ತು ಗೌರವಯುತ ಸ್ಥಳದಲ್ಲಿ ನಡೆದಿರುವ ಈ ಕೃತ್ಯ ಸಾರ್ವಜನಿಕರಲ್ಲಿ ತೀವ್ರ ಆಘಾತ ಉಂಟುಮಾಡಿದ್ದು, ಪ್ರಕರಣದ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Ravi Janekal</dc:creator>
            <atom:link href="https://kannada.asianetnews.com/crime/bidar-brims-attender-arrested-for-capturing-female-body-nude-photos-during-post-mortems-rav/articleshow-ly6kkc5"/>
        </item>
        <item>
            <title><![CDATA[ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯಕ್ಕೆ ಬಸವಣ್ಣನ ತತ್ವವೇ ಪ್ರೇರಣೆ: ಸಚಿವ ಈಶ್ವರ್ ಖಂಡ್ರೆ]]></title>
            <link>https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx</link>
            <guid isPermaLink="true">https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx</guid>
            <pubDate>Wed, 22 Apr 2026 23:52:48 +0530</pubDate>
            <description><![CDATA[&lt;p&gt;ಬಸವಣ್ಣನವರು ಕಾಯಕವೇ ಕೈಲಾಸ ಎಂಬ ಸಂದೇಶದೊಂದಿಗೆ ದುಡಿಯಬೇಕು, ದುಡಿದು ಗಳಿಸಬೇಕು, ಗಳಿಸಿದ್ದನ್ನು ಉಳಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9es3asmbdr2q8bxc24xnxzw,imgname-eshwar-khandre-1762506418996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಾಲ್ಕಿ (ಏ.22): &lt;/strong&gt;ಬಸವಣ್ಣನವರು ಕಾಯಕವೇ ಕೈಲಾಸ ಎಂಬ ಸಂದೇಶದೊಂದಿಗೆ ದುಡಿಯಬೇಕು, ದುಡಿದು ಗಳಿಸಬೇಕು, ಗಳಿಸಿದ್ದನ್ನು ಉಳಿಸಬೇಕು, ಉಳಿಸಿದ್ದನ್ನು ದಾಸೋಹದ ಮೂಲಕ ಸಮಾಜಕ್ಕೆ ಮರಳಿ ನೀಡಬೇಕು ಎಂದು ಸಾರಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಈ ದಾಸೋಹ ತತ್ವವೇ ಪ್ರೇರಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.&lt;/p&gt;&lt;p&gt;ಅವರು ಭಾಲ್ಕಿಯ ಹಿರೇಮಠ ಸಂಸ್ಥಾನದ ಆವರಣದಲ್ಲಿ ನಡೆಯುತ್ತಿರುವ ನಾಡೋಜ ಬಸವಲಿಂಗ ಪಟ್ಟದ್ದೇವರ ಅಮೃತಮಹೋತ್ಸವ ಹಾಗೂ ಲಿಂ. ಚನ್ನಬಸವ ಪಟ್ಟದ್ದೇವರ 27ನೇ ಸಂಸ್ಮರಣೋತ್ಸವದಲ್ಲಿ ಮಾತನಾಡಿ, ಇದಷ್ಟೇ ಅಲ್ಲ ಬಸವಾದಿ ಪ್ರಮಥರು ಅನುಭವಮಂಟಪದಲ್ಲಿ ಎಲ್ಲ, ಜಾತಿ ಜನಾಂಗದವರಿಗೂ ಸಮಾನ ಅವಕಾಶ ನೀಡಿದ್ದರು. ಇಲ್ಲಿ ಲಿಂಗತಾರತಮ್ಯವೂ ಇರಲಿಲ್ಲ, ಅಕ್ಕಮಹಾದೇವಿ, ಸತ್ಯಕ್ಕ, ಆಯ್ದಕ್ಕಿ ಲಕ್ಕಮ್ಮ, ನೀಲಾಂಬಿಕೆ, ಮುಕ್ತಾಯಕ್ಕ ಮೊದಲಾದವರು ತಮ್ಮ ವಿಚಾರಧಾರೆಗಳನ್ನು ಮುಂಡಿಸುತ್ತಿದ್ದರು. ಇದು ಮಹಿಳಾ ಸಬಲೀಕರಣದ ಸಂಕೇತವಾಗಿದ್ದು, ನಮ್ಮ ಸರ್ಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಯ ಮೂಲಕ ಅದನ್ನೂ ಮುಂದುವರಿಸಿದೆ ಎಂದರು.&lt;/p&gt;&lt;p&gt;ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶತಾಯುಷಿ ಶ್ರೀ ಚನ್ನಬಸವ ಪಟ್ಟದ್ದೇವರ 27ನೇ ಸಂಸ್ಮರಣೋತ್ಸವ ನಡೆಸುತ್ತಿದ್ದೇವೆ. ಅವರು, ಕ್ರಾಂತಿ ಪುರುಷರು. ಅಸ್ಪೃಶ್ಯತೆಯ ಆಚರಣೆ ತೊಡೆದು ಹಾಕಲು ನಮ್ಮ ತಂದೆ ಲಿಂ.ಲೋಕನಾಯಕ ಡಾ.ಭೀಮಣ್ಣ ಖಂಡ್ರೆ ಅವರಿಗೆ ಬೆಂಬಲವಾಗಿ ನಿಂತು ಭಾಲ್ಕೇಶ್ವರ ದೇವಾಲಯಕ್ಕೆ ಅಶೋಕನಗರ ನಿವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು. ಇಂದು ನಾವು ಕಾಣುತ್ತಿರುವ ಶಿವಲಿಂಗದಾಕಾರದ ಅನುಭವ ಮಂಟಪದ ನಿರ್ಮಾಣದ ಶ್ರೇಯಸ್ಸು ಚನ್ನಬಸವಪಟ್ಟದ್ದೇವರಿಗೆ ಆಗಲೂ ತಲೆ ಮೇಲೆ ಇಟ್ಟಿಗೆ ಹೊತ್ತು ಕಟ್ಟಡ ನಿರ್ಮಿಸಿದ್ದು ಆದರ್ಶವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಉಪ ರಾಷ್ಟ್ರಪತಿಗಳು ಆಗಮಿಸಿರುವುದು ಯೋಗಾಯೋಗ&lt;/strong&gt;&lt;/h2&gt;&lt;p&gt;ನಿಜಾಮರ ಆಳ್ವಿಕೆಯ ಕಾಲದಲ್ಲಿ ಕನ್ನಡ ಕಲಿಸಲು ಅವಕಾಶ ಇರಲಿಲ್ಲ. ಆಗ ಹೊರಗೆ ಉರ್ದು ಫಲಕ ಹಾಕಿ ಒಳಗೆ ಕನ್ನಡ ಕಲಿಸಲು ಶ್ರಮಿಸಿದ ಪಟ್ಟದ್ದೇವರು, ಮಕ್ಕಳಿಗೆ ವಚನ ಸಾರ ತಿಳಿಯುವಂತೆ ಮಾಡಿದ್ದರು. ತಮ್ಮ ದೀಕ್ಷಾ ಗುರು ಚನ್ನಬಸವ ಪಟ್ಟದ್ದೇವರ ಶತಮಾನೋತ್ಸವವನ್ನು ಭೀಮಣ್ಣ ಖಂಡ್ರೆ ಅವರು ಅದ್ಧೂರಿಯಾಗಿ ನಡೆಸಿದ್ದರು, ಆಗ ಅಂದಿನ ರಾಷ್ಟ್ರಪತಿ ಡಾ.ಶಂಕರದಯಾಳ್ ಶರ್ಮಾ ಆಗಮಿಸಿದ್ದರು. ಇಂದಿನ ಪೀಠಾಧಿಪತಿಗಳ ಅಮೃತ ಮಹೋತ್ಸವಕ್ಕೆ ಉಪ ರಾಷ್ಟ್ರಪತಿಗಳು ಆಗಮಿಸಿರುವುದು ಯೋಗಾಯೋಗ ಎಂದು ಈಶ್ವರ ಖಂಡ್ರೆ ಹೇಳಿದರು.&lt;/p&gt;&lt;p&gt;ನಾಡೋಜ ಬಸವಲಿಂಗ ಪಟ್ಟದ್ದೇವರು, ಮಾಸಿಕ ಶರಣ ಸಂಗಮ, ಶಿವಾನುಭವ ಪ್ರವಚನ, ವಚನ ಗಾಯನದಂತಹ ಕಾರ್ಯಕ್ರಮಗಳ ಮೂಲಕ ಶರಣರ ವಚನಗಳ ಪ್ರಚಾರ ಪ್ರಸಾರ ಮಾಡುತ್ತಿದ್ದಾರೆ, ಸರಳ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಮೂಲಕ ಬಡವರು ಸಾಲದ ಸುಳಿಗೆ ಸಿಲುಕದಂತೆ ರಕ್ಷಿಸಿ ದ್ದಾರೆ. ಇವರ ಸಾಧನೆಗಳನ್ನು ಗುರುತಿಸಿ ಹಂಪಿ ವಿಶ್ವವಿದ್ಯಾಲಯ ಅವರಿಗೆ ನಾಡೋಜ ಗೌರವ ನೀಡಿದೆ. ಅವರು ನೂರ್ಕಾಲ ಬಾಳಲಿ ನಮಗೆ ಮಾರ್ಗದರ್ಶನ ನೀಡಲಿ ಎಂದರು.&lt;/p&gt;&lt;p&gt;ಭಾಲ್ಕಿಯ ಮಣ್ಣಿನ ಮಗನಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನದ ಫಲವಾಗಿ ಕಲ್ಯಾಣ ಕರ್ನಾಟಕಕ್ಕೆ 371 ಜೆ ಸಾಂವಿಧಾನಿಕ ತಿದ್ದುಪಡಿ ಯೊಂದಿಗೆ ವಿಶೇಷ ಸ್ಥಾನಮಾನ ದೊರಕಿದೆ. ಇಂದು ಅದು ಕಾಯ್ದೆಯಾಗಿದ್ದು ನಮ್ಮ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಯಾದ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ಜೀವನದ ಉದ್ದಕ್ಕೂ ವಂಚಿತರಿಗೆ, ನೊಂದವರಿಗೆ ನ್ಯಾಯ ದೊರಕಿಸಲು ಹಾಗೂ ಸರ್ವರ ಸಮಾನತೆಗಾಗಿ ಶ್ರಮಿಸುತ್ತಿದ್ದಾರೆ, ಅವರು ಒಬ್ಬ ಮುತ್ಸದ್ದಿ ರಾಜಕಾರಣಿ ಎಂದು ಬಣ್ಣಿಸಿದರು.&lt;/p&gt;]]></content:encoded>
            <category>bidar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx"/>
        </item>
        <item>
            <title><![CDATA[ಬೀದರ್-ಬೆಂಗಳೂರು ವಿಮಾನ ಸೇವೆ ಶೀಘ್ರವೇ ಪುನರಾರಂಭ, ಮತ್ತೆ ಜಿಲ್ಲೆಯ ಜನತೆಗೆ ಸಂತಸದ ಸುದ್ದಿ]]></title>
            <link>https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7</guid>
            <pubDate>Sat, 16 May 2026 17:54:49 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಜೂನ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟವನ್ನು ಸರ್ಕಾರವೇ ಭರಿಸಲಿದ್ದು, ಈ ನಿರ್ಧಾರದಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಉತ್ತೇಜನ ಸಿಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krrbvjk4t29js5f256yxprrq,imgname-bidar-airport-1778934205028.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ : &lt;/strong&gt;ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಬೀದರ್ ಮತ್ತು ಬೆಂಗಳೂರು ನಡುವಿನ ನಾಗರಿಕ ವಿಮಾನಯಾನ ಸೇವೆ ಬರುವ ಜೂನ್ 1ರಿಂದ ಪುನರಾರಂಭಗೊಳ್ಳಲಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಜಿಲ್ಲಾ ಉಸ್ತುವಾರಿ ಮಂತ್ರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.&lt;/p&gt;&lt;p&gt;ಈ ಕುರಿತಂತೆ ಮಾತನಾಡಿ, ಕಳೆದ ಒಂದು ವರ್ಷದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅನುದಾನದ ಸಹಯೋಗದೊಂದಿಗೆ ಸ್ಟಾರ್ ಏರ್ ವಿಮಾನ ಸಂಸ್ಥೆಯು ಬೀದರ್-ಬೆಂಗಳೂರು ನಡುವೆ ಯಶಸ್ವಿಯಾಗಿ ಸೇವೆ ನೀಡುತ್ತಿತ್ತು. ಆದರೆ, ಮೇ 14ಕ್ಕೆ ಒಪ್ಪಂದದ ಅವಧಿ ಮುಕ್ತಾಯಗೊಂಡಿದ್ದರಿಂದ ವಿಮಾನಯಾನ ಸಂಸ್ಥೆಯು ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.&lt;/p&gt;&lt;h2&gt;ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟ ಸರ್ಕಾರದ ವತಿಯಿಂದಲೇ ಭರಿಸುವ ನಿರ್ಧಾರ&lt;/h2&gt;&lt;p&gt;ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮನವೊಲಿಸಲಾಗಿದೆ. ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟದ ಪಾಲನ್ನು (Viability Gap Funding) ಸರ್ಕಾರದ ವತಿಯಿಂದಲೇ ಭರಿಸುವ ಮೂಲಕ ಸೇವೆಯನ್ನು ಮತ್ತೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.&lt;/p&gt;&lt;p&gt;ಜೂನ್ 1ರಿಂದ ಬೀದರ್-ಬೆಂಗಳೂರು ಹಾಗೂ ಬೆಂಗಳೂರು-ಬೀದರ್ ಮಧ್ಯೆ ಪ್ರತಿದಿನ ವಿಮಾನಯಾನ ಸೇವೆ ಲಭ್ಯವಿರಲಿದ್ದು, ಇದರಿಂದ ಜಿಲ್ಲೆಯ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ನಾಗರಿಕರಿಗೆ ಅನುಕೂಲವಾಗಲಿದೆ. ಈ ಭಾಗದ ಪ್ರವಾಸೋದ್ಯಮ ಮತ್ತು ವ್ಯಾಪಾರೋದ್ಯಮದ ವೃದ್ಧಿಗೂ ಇದು ಮತ್ತಷ್ಟು ವೇಗ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಬೀದರ್ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿ, ವಿಮಾನಯಾನ ಪುನರಾರಂಭಕ್ಕೆ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.&lt;/p&gt;&lt;h2&gt;KKRDB ಅಧ್ಯಕ್ಷ ಅಜಯ್ ಸಿಂಗ್ ಕೂಡ ಸ್ಪಷ್ಟನೆ&lt;/h2&gt;&lt;p&gt;ಇನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ ಅಜಯ್ ಸಿಂಗ್ ಅವರು ಕೂಡ ಬೀದರ್&ndash;ಬೆಂಗಳೂರು ನಾಗರಿಕ ವಿಮಾನ ಸೇವೆ ಒಂದು ತಿಂಗಳೊಳಗೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7"/>
        </item>
        <item>
            <title><![CDATA[ಬೀದರ್‌ನಲ್ಲೂ ಕೋಟಿ ಬೆಲೆಯ ‘ಎರಡು ತಲೆ ಹಾವು’ ರಕ್ಷಣೆ: ಅರಣ್ಯ ಇಲಾಖೆಯಿಂದ ಮೂವರು ಸ್ಮಗ್ಲರ್‌ಗಳ ಬಂಧನ!]]></title>
            <link>https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky</link>
            <guid isPermaLink="true">https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky</guid>
            <pubDate>Thu, 14 May 2026 15:08:28 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ 'ಎರಡು ತಲೆ ಹಾವು' (ರೆಡ್ ಸ್ಯಾಂಡ್ ಬೋವಾ) ಅನ್ನು ರಕ್ಷಿಸಿದೆ. ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krjw38a4cgne6246qdd1d8q0,imgname-bidar-red-sand-boa-snake-rescue-1778749907268.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ 'ಎರಡು ತಲೆ ಹಾವು' (ರೆಡ್ ಸ್ಯಾಂಡ್ ಬೋವಾ) ಅನ್ನು ರಕ್ಷಿಸಿದೆ. ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;&lt;img&gt;&lt;p&gt;&lt;strong&gt;ಬೀದರ್:&lt;/strong&gt; ಗಡಿ ಜಿಲ್ಲೆ ಬೀದರ್&zwnj;ನಲ್ಲಿ ವನ್ಯಜೀವಿಗಳ ಅಕ್ರಮ ಸಾಗಾಟದ ದೊಡ್ಡ ಜಾಲವೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆಬಾಳುವ &lsquo;ಎರಡು ತಲೆ ಹಾವು&rsquo; ಅಥವಾ &lsquo;ಮಣ್ಣ ಮುಕ್ಕ ಹಾವು&rsquo; (Red Sand Boa) ಎಂದು ಕರೆಯಲ್ಪಡುವ ಅಪರೂಪದ ಹಾವನ್ನು ರಕ್ಷಿಸಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;&lt;img&gt;&lt;p&gt;ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ಆಶಿಶ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯ ತಂಡವು ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಆಂಧ್ರಪ್ರದೇಶ ನೋಂದಣಿ (AP Registration) ಹೊಂದಿದ್ದ ಬಿಳಿ ಬಣ್ಣದ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.&lt;/p&gt;&lt;img&gt;&lt;p&gt;ವಶಪಡಿಸಿಕೊಳ್ಳಲಾದ ರೆಡ್ ಸ್ಯಾಂಡ್ ಬೋವಾ ಹಾವು ಸುಮಾರು 5.34 ಕೆಜಿ ತೂಕವಿದ್ದು, ಇದು ಅತ್ಯಂತ ದೊಡ್ಡ ಗಾತ್ರದ ಹಾವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹಾವಿಗೆ ಕೋಟ್ಯಾಂತರ ರೂಪಾಯಿ ಬೆಲೆ ಇದೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಮಾಟ-ಮಂತ್ರ, ವಾಮಾಚಾರ ಹಾಗೂ ಔಷಧೀಯ ಗುಣಗಳಿವೆಯೆಂಬ ಮೂಢನಂಬಿಕೆಯಿಂದಾಗಿ ಇಂತಹ ಹಾವುಗಳ ಅಕ್ರಮ ಸಾಗಾಟ ಮತ್ತು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಹಾವು ಸಾಗಿಸುತ್ತಿದ್ದ ಕಾರನ್ನು ಜಪ್ತಿ ಮಾಡಿರುವ ಅಧಿಕಾರಿಗಳು, ಕಾರಿನಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಹಾವನ್ನು ಎಲ್ಲಿಂದ ತಂದಿದ್ದರು ಮತ್ತು ಯಾರಿಗೆ ಮಾರಾಟ ಮಾಡಲು ಹೊರಟಿದ್ದರು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;img&gt;&lt;p&gt;ಎರಡು ತಲೆ ಹಾವು ಅಥವಾ ಮಣ್ಣ ಮುಕ್ಕ ಹಾವುಗಳನ್ನು ಮನೆಯಲ್ಲಿಟ್ಟರೆ ಅಥವಾ ಪೂಜೆ ಮಾಡಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ತಪ್ಪು ಕಲ್ಪನೆ ಜನರಲ್ಲಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಸ್ಮಗ್ಲರ್&zwnj;ಗಳು ಕಾಡಿನಿಂದ ಇವುಗಳನ್ನು ಹಿಡಿದು ಕೋಟಿಗಟ್ಟಲೆ ಹಣಕ್ಕೆ ಮಾರಾಟ ಮಾಡುತ್ತಾರೆ. ಆದರೆ ವನ್ಯಜೀವಿಗಳನ್ನು ಹಿಡಿಯುವುದು ಮತ್ತು ಮಾರಾಟ ಮಾಡುವುದು ಕಾನೂನುಬಾಹಿರ ಹಾಗೂ ಕಠಿಣ ಶಿಕ್ಷಾರ್ಹ ಅಪರಾಧವಾಗಿದೆ.&amp;nbsp;&lt;/p&gt;&lt;p&gt;ಬೀದರ್ ಅರಣ್ಯ ಇಲಾಖೆಯ ಈ ಸಮಯೋಚಿತ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದ್ದು, ವನ್ಯಜೀವಿಗಳ ರಕ್ಷಣೆಗೆ ಇಲಾಖೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರಿನಲ್ಲಿಯೂ 2 ತಲೆ ಹಾವನ್ನ ಮಾರಾಟ ಮಾಡಲು ಯತ್ನಿಸಿದಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧನ ಮಾಡಿದ್ದರು. 1 ಕೆಜಿ 400 ಗ್ರಾಂ ತೂಕದ ಬೃಹತ್ 2 ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಂದ ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಸೀಜ್ ಮಾಡಿದ್ದರು. ಇಬ್ಬರು ಆಂಧ್ರ, ಇಬ್ಬರು ತುಮಕೂರು, ಓರ್ವ ಶಿವಮೊಗ್ಗ ಮೂಲದವರ ಬಂಧನ ಮಾಡಿ, ಕೋಟ್ಯಾಂತರ ರೂಪಾಯಿಗೆ ಬೆಲೆ ಬಾಳುವ ಎರಡು ತಲೆ (ಮಣ್ಣುಮುಕ್ಕ) ಹಾವು ರಕ್ಷಣೆ ಮಾಡಲಾಗಿತ್ತು.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky"/>
        </item>
        <item>
            <title><![CDATA[ಬೀದರ್‌ನ ಬಾನಿಗೆ ಮರಳಿದ ಲೋಹದ ಹಕ್ಕಿ! ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್]]></title>
            <link>https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</guid>
            <pubDate>Fri, 01 May 2026 16:39:34 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್&zwnj;-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಈ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಅನುದಾನ ಒದಗಿಸಲಾಗುತ್ತಿದ್ದು, ಇದು ಜಿಲ್ಲೆಯ ಸಂಪರ್ಕ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhkkstz3m20dc86284nr8mz,imgname-star-air-bidar-flights--1--1777633716063.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್&zwnj; ಜಿಲ್ಲೆಗೆ ಮಹತ್ವದ ಬೆಳವಣಿಗೆಯಾಗಿ, ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮತ್ತೆ ಆರಂಭಗೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬೀದರ್&zwnj;&ndash;ಬೆಂಗಳೂರು ನಡುವೆ ಕಾರ್ಯನಿರ್ವಹಿಸುತ್ತಿದ್ದ ವಿಮಾನ ಸೇವೆ ಪುನರಾರಂಭವಾಗಲಿದ್ದು, ಟರ್ಮಿನಲ್ ಕಾರ್ಯಾಚರಣೆಗಳು ಮತ್ತೆ ಚೇತರಿಸಿಕೊಳ್ಳಲು ದಾರಿ ಸುಗಮವಾಗಿದೆ.&lt;/p&gt;&lt;p&gt;ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಸಂಬಂಧ ಮನವಿ ಸಲ್ಲಿಸಿದ್ದರು. ಅವರ ಪ್ರಸ್ತಾವನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಬೀದರ್&zwnj;ನ ನಾಗರಿಕ ವಿಮಾನಯಾನ ಸೇವೆಗೆ ಅಗತ್ಯ ಅನುದಾನ ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.&lt;/p&gt;&lt;h2&gt;ವಿಮಾನಯಾನ ಸಂಸ್ಥೆ ಎದುರಿಸುವ ನಷ್ಟವನ್ನು ಭರಿಸಲು VGF ವ್ಯವಸ್ಥೆಯಡಿ ಅನುದಾನ&lt;/h2&gt;&lt;p&gt;ಈ ನಿರ್ಧಾರದ ಭಾಗವಾಗಿ, ವಿಮಾನಯಾನ ಸಂಸ್ಥೆಗಳು ಎದುರಿಸುವ ನಷ್ಟವನ್ನು ಭರಿಸಲು Viability Gap Funding (VGF) ವ್ಯವಸ್ಥೆಯಡಿ ಅನುದಾನ ನೀಡಲಾಗುತ್ತದೆ. ಈ ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ಭರಿಸಲಾಗುವುದು. ಇದರಿಂದ ವಿಮಾನ ಸೇವೆ ನಿರಂತರವಾಗಿ ಕಾರ್ಯನಿರ್ವಹಿಸಲು ಸಹಾಯವಾಗಲಿದ್ದು, ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ಮಹತ್ವದ ಉತ್ತೇಜನ ದೊರೆಯಲಿದೆ.&lt;/p&gt;&lt;p&gt;ಇತ್ತೀಚೆಗೆ, ನಾಗರಿಕ ವಿಮಾನಯಾನ ಸೇವೆಯನ್ನು ನಿರ್ವಹಿಸುತ್ತಿದ್ದ ಸ್ಟಾರ್ ಏರ್ ಸಂಸ್ಥೆಯು ಸರ್ಕಾರದೊಂದಿಗೆ ಮಾಡಿಕೊಂಡಿದ್ದ ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಕಳೆದ ವರ್ಷ ಸರ್ಕಾರವು ಕೆಕೆಆರ್&zwnj;ಡಿಬಿ ನಿಧಿಯಿಂದ ಸುಮಾರು 13 ಕೋಟಿ ರೂಪಾಯಿ ಅನುದಾನವನ್ನು ನೀಡಿತ್ತು. ಇದೀಗ ಹೊಸ ಅವಧಿಗೆ ಸ್ಟಾರ್ ಏರ್ ಸಂಸ್ಥೆಯು 20 ಕೋಟಿ ರೂಪಾಯಿಗಿಂತ ಹೆಚ್ಚು ಅನುದಾನ ಬೇಡಿಕೆ ಇಟ್ಟಿದ್ದುದಾಗಿ ಮೂಲಗಳು ತಿಳಿಸಿವೆ.&lt;/p&gt;&lt;p&gt;ಸಚಿವ ಈಶ್ವರ ಖಂಡ್ರೆ ಅವರ ಸತತ ಪ್ರಯತ್ನದ ಫಲವಾಗಿ ಸರ್ಕಾರ ಮತ್ತೆ ಅನುದಾನ ನೀಡಲು ಸಮ್ಮತಿಸಿರುವುದರಿಂದ, ಬೀದರ್&zwnj;ನಲ್ಲಿ ವಿಮಾನ ಸೇವೆ ಪುನರಾರಂಭವಾಗುವುದು ಖಚಿತವಾಗಿದೆ. ಈ ಕ್ರಮದಿಂದ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ವಲಯಗಳಿಗೆ ಮಹತ್ತರ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.&lt;/p&gt;&lt;h2&gt;ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಅನುಕೂಲ&lt;/h2&gt;&lt;p&gt;ಇದರಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಸಹ ಹೆಚ್ಚಿನ ಅನುಕೂಲ ಸಿಗಲಿದೆ, ಏಕೆಂದರೆ ಅವರು ಕೂಡ ಬೀದರ್ ವಿಮಾನ ನಿಲ್ದಾಣವನ್ನು ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಒಟ್ಟಿನಲ್ಲಿ, ಈ ನಿರ್ಧಾರ ಉತ್ತರ ಕರ್ನಾಟಕ ಭಾಗದ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.&lt;/p&gt;&lt;p&gt;ಬೀದರ್&zwnj; &ndash; ಬೆಂಗಳೂರು ನಡುವೆ ಮತ್ತೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗಲಿದ್ದು, ಸರ್ಕಾರಕ್ಕೆ ಹಾಗೂ ಕೆಕೆಆರ್&zwnj;ಡಿಬಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಹಾಗೂ ಬೀದರ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ.&lt;/p&gt;&lt;p&gt;- ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1"/>
        </item>
        <item>
            <title><![CDATA[ಮನೆ ಮ್ಯೂಟೇಷನ್‌ಗೆ ₹5 ಲಕ್ಷ ಲಂಚ; 2.5 ಲಕ್ಷ ಹಣದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!]]></title>
            <link>https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr</link>
            <guid isPermaLink="true">https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr</guid>
            <pubDate>Tue, 05 May 2026 20:13:15 +0530</pubDate>
            <description><![CDATA[&lt;p&gt;ಬೀದರ್&zwnj;ನಲ್ಲಿ ಮನೆ ಮ್ಯೂಟೇಷನ್ ಮಾಡಿಕೊಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮರಗುಂದಾ ಗ್ರಾಮದ ಡಾಬಾದಲ್ಲಿ ಮೊದಲ ಕಂತು ₹2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿ ಶಿವಕುಮಾರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqw93fhg6xsat79dw0tmhkny,imgname-bidar-lokayukta-trap-1777991794224.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ 05): ಭ್ರ&lt;/strong&gt;ಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬೀದರ್&zwnj;ನಲ್ಲಿ ಮನೆಯ ಮ್ಯೂಟೇಷನ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 2.5 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಈ ದಾಳಿ ನಡೆದಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬೀದರ್ ತಾಲೂಕಿನ ಮರಗುಂದಾ ಗ್ರಾಮದ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ. ಮರಕುಂದಾ ಗ್ರಾಮದ ನಿವಾಸಿ ಮಹಾದೇವ್ ಶಾಂತಪ್ಪ ಎಂಬುವವರು ತಮ್ಮ ಮನೆಯ ಮ್ಯೂಟೇಷನ್ (ಖಾತಾ ಬದಲಾವಣೆ) ಮಾಡಿಕೊಡುವಂತೆ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರ ಬಳಿ ಮನವಿ ಮಾಡಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಶಿವಕುಮಾರ್ ಬರೋಬ್ಬರಿ 5 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು.&lt;/p&gt;&lt;h2&gt;&lt;strong&gt;ದಾಬಾದಲ್ಲಿ ನಡೆದ ಲಂಚದ ಡೀಲ್:&lt;/strong&gt;&lt;/h2&gt;&lt;p&gt;ಲಂಚದ ಹಣ ನೀಡಲು ಇಚ್ಛಿಸದ ಮಹಾದೇವ್ ಅವರು ಬೀದರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಯೋಜನೆಯಂತೆ, ಮರಕುಂದಾ ಗ್ರಾಮದ ಹೊರವಲಯದಲ್ಲಿರುವ ದಾಬಾವೊಂದರಲ್ಲಿ ಲಂಚದ ಹಣದ ಮೊದಲ ಕಂತು 2.5 ಲಕ್ಷ ರೂಪಾಯಿಯನ್ನು ನೀಡಲು ನಿರ್ಧರಿಸಲಾಗಿತ್ತು. ಹಣವನ್ನು ಸ್ವೀಕರಿಸಲು ಶಿವಕುಮಾರ್ ತನ್ನ ಸಹಚರ ಶರಣಯ್ಯ ಎಂಬಾತನೊಂದಿಗೆ ಆಗಮಿಸಿದ್ದನು.&lt;/p&gt;&lt;h2&gt;&lt;strong&gt;ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ:&lt;/strong&gt;&lt;/h2&gt;&lt;p&gt;ಮಹಾದೇವ್ ಅವರಿಂದ 2.5 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ, ಸುತ್ತುವರಿದಿದ್ದ ಲೋಕಾಯುಕ್ತ ಅಧಿಕಾರಿಗಳು ಶಿವಕುಮಾರ್ ಮತ್ತು ಆತನ ಸಹಚರ ಶರಣಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಬೀದರ್ ಲೋಕಾಯುಕ್ತ ಡಿಎಸ್&zwnj;ಪಿ ಹಣಮಂತರಾಯ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರ ಆಕ್ರೋಶ:&lt;/strong&gt;&lt;/h3&gt;&lt;p&gt;ಸಣ್ಣ ಕೆಲಸಗಳಿಗೂ ಸಾವಿರಾರು ರೂಪಾಯಿ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಮನೆ ಮ್ಯೂಟೇಷನ್ ಮಾಡಲು 5 ಲಕ್ಷ ರೂಪಾಯಿ ಬೇಡಿಕೆಯಿಟ್ಟ ಗ್ರಾಮ ಲೆಕ್ಕಾಧಿಕಾರಿಯ ಧಾರ್ಷ್ಟ್ಯ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಸದ್ಯ ಬಂಧಿತರಿಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಬೀದರ್ ಲೋಕಾಯುಕ್ತ ಪೊಲೀಸರ ಈ ಕಾರ್ಯಾಚರಣೆಯು ಭ್ರಷ್ಟ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದ್ದು, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಪ್ರೇರಣೆಯಾಗಿದೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr"/>
        </item>
        <item>
            <title><![CDATA[ಬೀದರ್-ಬೆಂಗಳೂರು ನೇರ ವಿಮಾನಯಾನ ಜೂನ್ 1 ರಿಂದ ಆರಂಭ, ವೇಳಾಪಟ್ಟಿ ಬಿಡುಗಡೆ, ಚೆಕ್ ಮಾಡಿಕೊಳ್ಳಿ]]></title>
            <link>https://kannada.asianetnews.com/karnataka-districts/good-news-for-kalyana-karnataka-bengaluru-bidar-star-air-flights-resume-from-june-1st-check-out-airline-timings-gdp/articleshow-xlsh34k</link>
            <guid isPermaLink="true">https://kannada.asianetnews.com/karnataka-districts/good-news-for-kalyana-karnataka-bengaluru-bidar-star-air-flights-resume-from-june-1st-check-out-airline-timings-gdp/articleshow-xlsh34k</guid>
            <pubDate>Tue, 19 May 2026 18:20:57 +0530</pubDate>
            <description><![CDATA[ಜೂನ್ 1 ರಿಂದ ಬೀದರ್-ಬೆಂಗಳೂರು ನಡುವಿನ ನೇರ ವಿಮಾನ ಸೇವೆ ಸ್ಟಾರ್ ಏರ್ ಮೂಲಕ ಪುನರಾರಂಭಗೊಳ್ಳಲಿದೆ. ಬೆಂಗಳೂರಿನಿಂದ ಬೆಳಿಗ್ಗೆ 6:30ಕ್ಕೆ ಮತ್ತು ಬೀದರ್&zwnj;ನಿಂದ 8:15ಕ್ಕೆ ವಿಮಾನಗಳು ಹೊರಡಲಿದ್ದು, ಈ ಸೇವೆಯು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jj8hkaw4djebaykbmsng1vq7,imgname-star-air.jpg" type="image/jpeg" height="390" width="690"/>
            <content:encoded><![CDATA[&lt;p&gt;ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ನಿರೀಕ್ಷೆಯಾಗಿದ್ದ ಬೀದರ್&ndash;ಬೆಂಗಳೂರು ನಡುವಿನ ನೇರ ವಿಮಾನ ಸೇವೆ ಜೂನ್ 1ರಿಂದ ಪುನರಾರಂಭಗೊಳ್ಳಲಿದ್ದು, ನೂತನ ವೇಳಾಪಟ್ಟಿ ಯನ್ನು ನಿಗದಿಪಡಿಸಲಾಗಿದೆ. ಬೆಂಗಳೂರಿನಿಂದ ಬೆಳಿಗ್ಗೆ 6:30ಕ್ಕೆ ಹೊರಡಲಿರುವ ವಿಮಾನ 7:45ಕ್ಕೆ ಬೀದರ್ ತಲುಪಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.&lt;/p&gt;&lt;h2&gt;ವಿಮಾನ ವೇಳಾಪಟ್ಟಿ ಇಲ್ಲಿದೆ&lt;/h2&gt;&lt;p&gt;ಈ ಕುರಿತು ಪ್ರಕಟಣೆ ನೀಡಿರುವ ಸಚಿವರು, ಸ್ಟಾರ್ ಏರ್ ವತಿಯಿಂದ ಆರಂಭವಾಗುತ್ತಿರುವ ಈ ವಿಮಾನ ಸೇವೆಯ ವೇಳಾಪಟ್ಟಿಯಂತೆ ಬೀದರ್&zwnj;ನಿಂದ ಬೆಳಿಗ್ಗೆ 8:15ಕ್ಕೆ ಹೊರಡುವ ವಿಮಾನ 9:30ಕ್ಕೆ ಬೆಂಗಳೂರು ತಲುಪಲಿದ್ದು, ಕೇವಲ 1 ಗಂಟೆ 15 ನಿಮಿಷಗಳಲ್ಲಿ ಉಭಯ ನಗರಗಳ ನಡುವೆ ಪ್ರಯಾಣಿಸಬಹುದಾಗಿದೆ ಎಂದು ವಿವರಿಸಿದ್ದಾರೆ.&lt;/p&gt;&lt;p&gt;ಈ ವಿಮಾನ ಸೇವೆ ಪುನರಾರಂಭಗೊಳ್ಳಲು ನಿರಂತರ ಪ್ರಯತ್ನ ಮಾಡಲಾಗಿದ್ದು, ಇದರ ಫಲವಾಗಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮತ್ತೆ ವಾಯು ಸಂಪರ್ಕ ಸೌಲಭ್ಯ ಲಭ್ಯವಾಗುತ್ತಿದೆ. ಇದರಿಂದ ಜಿಲ್ಲೆಯ ವ್ಯಾಪಾರ, ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳ ಪ್ರಗತಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;ಈ ಮಹತ್ವದ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್, ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು, ಕೆಕೆಆರ್&zwnj;ಡಿಬಿ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ನೀಡಿದ ಸಹಕಾರಕ್ಕೆ ಸಚಿವ ಈಶ್ವರ ಖಂಡ್ರೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಹಾಗೆಯೇ ಬೀದರ್ ಲೋಕಸಭಾ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ, ಸಚಿವರಾದ ರಹೀಂ ಖಾನ್ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರ ಸಹಕಾರವೂ ಶ್ಲಾಘನೀಯ ವಾಗಿದೆ ಎಂದು ಅವರು ತಿಳಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ಜನರ ಸೌಲಭ್ಯಕ್ಕಾಗಿ ಸರ್ಕಾರ ಇನ್ನಷ್ಟು ಪ್ರಗತಿಪರ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/good-news-for-kalyana-karnataka-bengaluru-bidar-star-air-flights-resume-from-june-1st-check-out-airline-timings-gdp/articleshow-xlsh34k"/>
        </item>
    </channel>
</rss>
