<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 18 May 2026 06:04:19 +0530</lastBuildDate>
        <atom:link href="https://kannada.asianetnews.com/rss/bidar" rel="self" type="application/rss+xml"/>
        <item>
            <title><![CDATA[ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹತ್ತಿದ ಪೊಲೀಸ್ ಪೇದೆ ಕಾರ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!]]></title>
            <link>https://kannada.asianetnews.com/karnataka-districts/bidar-police-constable-s-car-runs-over-woman-in-bhalki-shocking-cctv-footage-emerges-sat/articleshow-0ge4gqr</link>
            <guid isPermaLink="true">https://kannada.asianetnews.com/karnataka-districts/bidar-police-constable-s-car-runs-over-woman-in-bhalki-shocking-cctv-footage-emerges-sat/articleshow-0ge4gqr</guid>
            <pubDate>Fri, 03 Apr 2026 21:04:09 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ, ರಸ್ತೆ ಗುಡಿಸುತ್ತಿದ್ದ ಜ್ಞಾನಾಬಾಯಿ ಎಂಬ ಮಹಿಳೆಯ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn9zm3n7b5zqr6ma20gkrr05,imgname-bidar-police-constable-car-accident-1775230389927.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್: ಜಿ&lt;/strong&gt;ಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದ್ದು, ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.&lt;/p&gt;&lt;h3&gt;ಘಟನೆಯ ವಿವರ:&lt;/h3&gt;&lt;p&gt;ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಚಿನ್ನದ ಅಂಗಡಿಯೊಂದರ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಜ್ಞಾನಾಬಾಯಿ (55) ಎಂಬ ಮಹಿಳೆ ರಸ್ತೆ ಬದಿಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರೊಂದು ನೇರವಾಗಿ ಮಹಿಳೆಯ ಮೇಲೆ ಹರಿದಿದೆ. ಕಾರು ಹರಿದ ರಭಸಕ್ಕೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಪೊಲೀಸ್ ಪೇದೆಯ ಕಾರು:&lt;/strong&gt;&lt;/h3&gt;&lt;p&gt;ಈ ಭೀಕರ ಅಪಘಾತಕ್ಕೆ ಕಾರಣವಾದ ಕಾರು ಮೆಹಕರ್ ಪೊಲೀಸ್ ಠಾಣೆಯ ಪೇದೆ ಉಮಾಕಾಂತ್ ಅವರಿಗೆ ಸೇರಿದ್ದೆಂದು ತಿಳಿದುಬಂದಿದೆ. ಪೇದೆ ಉಮಾಕಾಂತ್ ಅವರೇ ಕಾರನ್ನು ಚಾಲನೆ ಮಾಡುತ್ತಿದ್ದರೇ ಅಥವಾ ಬೇರೆಯವರು ಇದ್ದರೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಅಪಘಾತದ ದೃಶ್ಯಗಳು ಲಭ್ಯವಿದ್ದು, ಕಾರು ಎಷ್ಟು ವೇಗವಾಗಿ ಬಂದು ಮಹಿಳೆಗೆ ಡಿಕ್ಕಿ ಹೊಡೆದಿದೆ ಎಂಬುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.&lt;/p&gt;&lt;h2&gt;&lt;strong&gt;ಸ್ಥಿತಿ ಗಂಭೀರ:&lt;/strong&gt;&lt;/h2&gt;&lt;p&gt;ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಜ್ಞಾನಾಬಾಯಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿರುವುದರಿಂದ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸದ್ಯ ಅವರಿಗೆ ಬೀದರ್&zwnj;ನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h3&gt;&lt;strong&gt;ತನಿಖೆ ಆರಂಭ:&lt;/strong&gt;&lt;/h3&gt;&lt;p&gt;ಘಟನೆ ನಡೆದ ಸ್ಥಳಕ್ಕೆ ಭಾಲ್ಕಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ತವ್ಯದಲ್ಲಿರಬೇಕಾದ ಅಥವಾ ಕಾನೂನು ಪಾಲಿಸಬೇಕಾದ ಪೊಲೀಸ್ ಪೇದೆಯ ಕಾರೇ ಈ ರೀತಿ ಅನಾಹುತ ಸೃಷ್ಟಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.&lt;/p&gt;&lt;p&gt;In a tragic incident in Bhalki town of Bidar district, a woman was critically injured after being run over by a car driven by a police constable.The victim, Gyanabai (45), a resident of Bhalaki, was sweeping the road when the accident occurred.According to reports, the car,&hellip; pic.twitter.com/NHOiO54Mz0&lt;/p&gt;&lt;p&gt;&mdash; Hate Detector  (@HateDetectors) April 3, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bidar-police-constable-s-car-runs-over-woman-in-bhalki-shocking-cctv-footage-emerges-sat/articleshow-0ge4gqr"/>
        </item>
        <item>
            <title><![CDATA[Stray Dog Attacks 4 Month Old Baby: ಮನೆಯೊಳಗೆ ಮಲಗಿದ್ದ 4 ತಿಂಗಳ ಕಂದಮ್ಮನ ಮೇಲೆ ಬೀದಿ ನಾಯಿ ದಾಳಿ, ಚಿಕಿತ್ಸೆ ಫಲಿಸದೆ ಮಗು ಸಾವು]]></title>
            <link>https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq</link>
            <guid isPermaLink="true">https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq</guid>
            <pubDate>Sun, 10 May 2026 09:46:34 +0530</pubDate>
            <description><![CDATA[&lt;p&gt;ಬೀದರ್&zwnj;ನ ದುಬಲಗುಂಡಿ ಗ್ರಾಮದಲ್ಲಿ, ಮನೆಯೊಳಗೆ ಮಲಗಿದ್ದ ನಾಲ್ಕು ತಿಂಗಳ ಕಂದಮ್ಮನ ಮೇಲೆ ಬೀದಿ ನಾಯಿ ದಾಳಿ ಮಾಡಿ, ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಈ ಘಟನೆಗೆ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸಚಿವರಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr81bvq01w04qwrg64073wzr,imgname-----------------------2026-05-10t093449.241-1778386333408.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ.10)&lt;/strong&gt;: ಮನೆಯ ಒಳಗಡೆ ಮಲಗಿದ್ದ ನಾಲ್ಕು ತಿಂಗಳ ಕಂದಮ್ಮನನ್ನು ಬೀದಿ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಕಚ್ಚಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನಪ್ಪಿದ ಘಟನೆ ಶನಿವಾರ ಬೆಳಗ್ಗೆ ಹುಮನಾಬಾದ್&zwnj; ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಸಂಭವಿಸಿದೆ.&lt;/p&gt;&lt;p&gt;ಸುಧಾ ಹಾಗೂ ಸಿದ್ಧಪ್ಪ ದಂಪತಿಯ ಮಗು ಬೀದಿ ನಾಯಿ ದಾಳಿಗೆ ಬಲಿಯಾಗಿದ್ದು, ನಾಯಿ ದಾಳಿಯಿಂದ ಮಗುವಿನ ಮುಖ, ಕಣ್ಣು ಹಾಗೂ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಇದರಿಂದ ದುಬಲಗುಂಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್&zwnj;ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು, ಆದರೆ ಮಗು ಚಿಕಿತ್ಸೆ ಫಲಿಸದೆ ಅಸುನೀಗಿದೆ ಎಂದು ತಿಳಿದು ಬಂದಿದೆ.&lt;/p&gt;&lt;p&gt;ಮಗುವನ್ನು ಮನೆಯೊಳಗೆ ಮಲಗಿಸಿ ತಾಯಿ ಹೊರಗೆ ಕೆಲಸ ಮಾಡುವಾಗ ಬೀದಿ ನಾಯಿಯೊಂದು ಮನೆಯೊಳಗೆ ನುಗ್ಗಿ ಮಗುವಿನ ದೇಹದ ವಿವಿಧ ಭಾಗಗಳನ್ನು ಕಚ್ಚಿದ್ದರಿಂದ ಮಗು ಗಂಭೀರವಾಗಿ ಗಾಯಗೊಂಡು ಅತ್ತಿರುವ ಶಬ್ದ ಕೇಳಿ ಪಾಲಕರು ಓಡಿ ಬಂದು ನೋಡುವಷ್ಟರಲ್ಲಿ ಮಗು ನಾಯಿ ದಾಳಿಕ್ಕೆ ತುತ್ತಾಗಿತ್ತು ಎಂದು ಹೇಳಲಾಗಿದೆ. ಈ ನಾಯಿ ಗ್ರಾಮದ ಇತರೇ ಒಬ್ಬ ಬಾಲಕ ಸೇರಿ ಮೂರು ಜನರಿಗೂ ನಾಯಿ ದಾಳಿ ನಡೆಸಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಇನ್ನು, ಮಗು ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳೇ ಕಾರಣವಾಗಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;ಸಚಿವ ಖಂಡ್ರೆ ಕಂಬನಿ:&lt;/h2&gt;&lt;p&gt;ಮೃತ ಕಂದಮ್ಮನ ಕುಟುಂಬದವರೊಂದಿಗೆ ಈ ನೋವಿನ ಸಂದರ್ಭದಲ್ಲಿ ಸರ್ಕಾರ ನಿಲ್ಲುತ್ತದೆ. ದೇವರು ಮೃತ ಮಗುವಿನ ಆತ್ಮಕ್ಕೆ ಚಿರಶಾಂತಿ ನೀಡಲಿ, ತಂದೆ ತಾಯಿಗಳಿಗೆ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಕೂಡಲೇ ನಿಯಮಾನುಸಾರ ಪರಿಹಾರ ನೀಡುವಂತೆ ಬೀದರ್&zwnj; ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bidar-horror-stray-dog-attacks-4-month-old-baby-sleeping-inside-house-infant-dies-rav/articleshow-0np99aq"/>
        </item>
        <item>
            <title><![CDATA[ಬೀದರ್ ಎಸ್‌ಪಿ  ಕಿರುಕುಳ ಆರೋಪ, ಪೇಸ್‌ಬುಕ್ ಲೈವ್‌ನಲ್ಲೇ  ಆತ್ಮ*ಹತ್ಯೆಗೆ ಯತ್ನಿಸಿದ ಯೂಟ್ಯೂಬರ್!]]></title>
            <link>https://kannada.asianetnews.com/karnataka-districts/youtuber-attempts-suicide-alleging-harassment-by-bidar-sp-pradeep-gunti-incident-sparks-outrage-gdp/articleshow-101l8r0</link>
            <guid isPermaLink="true">https://kannada.asianetnews.com/karnataka-districts/youtuber-attempts-suicide-alleging-harassment-by-bidar-sp-pradeep-gunti-incident-sparks-outrage-gdp/articleshow-101l8r0</guid>
            <pubDate>Fri, 03 Apr 2026 09:15:29 +0530</pubDate>
            <description><![CDATA[ಬೀದರ್ ಜಿಲ್ಲೆಯ ಯೂಟ್ಯೂಬರ್ ಸಲ್ಮಾನ್ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕೆಲ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್&zwnj;ಬುಕ್ ಲೈವ್&zwnj;ನಲ್ಲಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಂತಿ ಸಭೆಯ ಹೆಸರಿನಲ್ಲಿ ಕರೆಸಿ ಅವಮಾನಿಸಿ, ಎನ್&zwnj;ಕೌಂಟರ್ ಬೆದರಿಕೆ ಹಾಕಲಾಗಿದೆ ಎಂದು ಅವರು ಆರೋಪಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn8pst2wykmnk11pzs4g1954,imgname-bidar-youtuber-suicide-attempt-1775187585116.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಯೂಟ್ಯೂಬರ್ ಆತ್ಮ*ಹತ್ಯೆ ಯತ್ನ ಪ್ರಕರಣವು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಪೊಲೀಸ್ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಯೂಟ್ಯೂಬರ್ ಸಲ್ಮಾನ್ ಖಾನ್ ಎಂಬ ಯುವಕ, ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್&zwnj;ಪಿ) ಪ್ರದೀಪ್ ಗುಂಟಿ ಸೇರಿದಂತೆ ಕೆಲ ಪೊಲೀಸ್ ಸಿಬ್ಬಂದಿಯಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದೇನೆಂದು ಆರೋಪಿಸಿ, ಪೇಸ್&zwnj;ಬುಕ್ ಲೈವ್&zwnj;ನಲ್ಲೇ ಮಾತ್ರೆಗಳು ನುಂಗಿ ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;h2&gt;ಶಾಂತಿ ಸಭೆ ಇದೆ ಎಂದು ಕರೆಸಿ ಅವಮಾನ&lt;/h2&gt;&lt;p&gt;ಸಲ್ಮಾನ್ ಖಾನ್ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಸಮಾಜದ ವಿವಿಧ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ಈ ವಿಡಿಯೋಗಳ ವಿಷಯವಸ್ತು ಸಮಾಜದಲ್ಲಿ ಶಾಂತಿ ಕೆದಕುವಂತಿದೆ ಎಂದು ಹೇಳಿ, ಶಾಂತಿ ಸಭೆ ಇದೆ ಎಂದು ಕಛೇರಿಗೆ ಕರೆಸಿ ಎಲ್ಲರೆದುರು ಹಲ್ಲೆಗೆ ಯತ್ನಿಸಿದ್ದಾರೆ. ಯೂಟ್ಯೂಬ್ ಚಾನೆಲ್ ಮುಂದುವರೆಸದಂತೆ ತಾಕೀತು ಮಾಡಲಾಗಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಅಲ್ಲದೇ, ಎನ್&zwnj;ಕೌಂಟರ್ ಮಾಡುತ್ತೇನೆ ಮತ್ತು ಮರ್ಡರ್ ಮಾಡುತ್ತೇನೆ ಎಂಬ ಬೆದರಿಕೆಗಳನ್ನು ಹಾಕಲಾಗಿದೆ ಎಂದು ಕಣ್ಣೀರಿಟ್ಟು ಪೇಸ್&zwnj;ಬುಕ್ ಲೈವ್&zwnj;ನಲ್ಲಿ ಹೇಳಿಕೊಂಡಿದ್ದಾರೆ.&lt;/p&gt;&lt;h2&gt;ಈ ವಿಡಿಯೋ ಮೋದಿಗೆ ತಲುಪಬೇಕು&lt;/h2&gt;&lt;p&gt;ತಮ್ಮ ಲೈವ್ ವಿಡಿಯೋದಲ್ಲಿ ಸಲ್ಮಾನ್, &ldquo;ಈ ವಿಡಿಯೋ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಬೇಕು&rdquo; ಎಂದು ಹೇಳಿದ್ದು, ಪೊಲೀಸ್ ಇಲಾಖೆಯ ಕಿರುಕುಳದಿಂದಲೇ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.&lt;/p&gt;&lt;p&gt;ಈ ಎಲ್ಲಾ ವಿಚಾರವನ್ನು ಹೇಳಿ ಪೇಸ್&zwnj;ಬುಕ್ ಲೈವ್&zwnj;ನಲ್ಲೇ ಮಾತ್ರೆಗಳು ನುಂಗಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಬೀದರ್&zwnj;ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;p&gt;ಈ ಘಟನೆಗೆ ಸಂಬಂಧಿಸಿ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ವರ್ತನೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ. ಇನ್ನೊಂದೆಡೆ, ಸಲ್ಮಾನ್ ಮಾಡಿದ ಆರೋಪಗಳ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವ ಅಗತ್ಯವಿದೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/youtuber-attempts-suicide-alleging-harassment-by-bidar-sp-pradeep-gunti-incident-sparks-outrage-gdp/articleshow-101l8r0"/>
        </item>
        <item>
            <title><![CDATA[ಮೋದಿಯನ್ನು 'ಟೆರರಿಸ್ಟ್'​ ಎಂದ ಖರ್ಗೆಗೆ ಬೀದರ್​ನಲ್ಲಿ ಕಪ್ಪು ಬಿಳುಪಿನ ವ್ಯತ್ಯಾಸ ತಿಳಿಸಿದ ಉಪ ರಾಷ್ಟ್ರಪತಿ]]></title>
            <link>https://kannada.asianetnews.com/politics/doesnt-differentiate-between-terrorists-and-terror-to-terrorists-vp-radhakrishnan-slams-kharge-suc/articleshow-3hzlyc8</link>
            <guid isPermaLink="true">https://kannada.asianetnews.com/politics/doesnt-differentiate-between-terrorists-and-terror-to-terrorists-vp-radhakrishnan-slams-kharge-suc/articleshow-3hzlyc8</guid>
            <pubDate>Wed, 22 Apr 2026 17:17:52 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಗೆ, ಖರ್ಗೆಯವರ ಸಮ್ಮುಖದಲ್ಲಿಯೇ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ತೀಕ್ಷ್ಣ ತಿರುಗೇಟು ನೀಡಿದ್ದು, ಬಿಜೆಪಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kptg5hjvvbwpp808ykzn86ag,imgname-cr-radhakrishnan-and-kharge-1776858351195.jpg" type="image/jpeg" height="390" width="690"/>
            <content:encoded><![CDATA[&lt;p&gt;ಚುನಾವಣೆಯ ಕಾವು ಏರುತ್ತಿದ್ದಂತೆಯೇ ಆರೋಪ, ಪ್ರತ್ಯಾರೋಪಗಳು ಸರ್ವೇ ಸಾಮಾನ್ಯ. ಆದರೆ ಇದರ ನಡುವೆ ಕೆಲವು ರಾಜಕೀಯ ಮುಖಂಡರು, ಯಾರನ್ನೋ ಓಲೈಸುವುದಕ್ಕಾಗಿ ಅಥವಾ ತಮಗೆ ಆಗದವರನ್ನು ಹೀಯಾಳಿಸುವ ಭರದಲ್ಲಿ ನಾಲಿಗೆ ಹರಿಬಿಡುವುದು ಮಾಮೂಲು. ತಮ್ಮ ಸ್ಥಾನ ಏನು, ತಮ್ಮ ಅಧಿಕಾರ ಏನು ಎನ್ನುವುದನ್ನೂ ಮರೆತು ಅತ್ಯಂತ ಕೀಳು ಮಟ್ಟದಲ್ಲಿ ಮಾತನಾಡುವುದು ನಡೆದೇ ಇರುತ್ತದೆ. ಈ ಮೂಲಕ ತಮ್ಮತನವನ್ನು ತೋರಿಸಿಕೊಳ್ಳುತ್ತಾರೆ ಎಂಬ ಭಾರಿ ಆರೋಪ ಅವರ ಮೇಲೆ ಕೇಳಿಬರುತ್ತಿದ್ದರೂ ಮಾತಿನ ಮೇಲೆ ನಿಗಾ ಇಡದೇ ಅಸಭ್ಯವಾಗಿ ಮಾತನಾಡುವುದು ನಡೆದಿರುತ್ತದೆ.&lt;/p&gt;&lt;h2&gt;&lt;strong&gt;ಮೋದಿಯನ್ನು ಟೆರರಿಸ್ಟ್​ ಎಂದ ಖರ್ಗೆ&lt;/strong&gt;&lt;/h2&gt;&lt;p&gt;ಮೊನ್ನೆಯಷ್ಟೇ, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿದ ಹೇಳಿಕೆಯೊಂದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಅವರನ್ನು 'ಭಯೋತ್ಪಾದಕ' ಎಂದು ಕರೆದಿದ್ದಾರೆ. ಈ ಹಿಂದೆ ಆರ್​ಎಸ್​​ಎಸ್​​ ಮತ್ತು ಬಿಜೆಪಿ ವಿಷಸರ್ಪ, ಅವರನ್ನು ಸಾಯಿಸಿ ಎಂಬ ಅರ್ಥದಲ್ಲಿ ಮುಸ್ಲಿಂ ಸಮುದಾಯಕ್ಕೆ ಕರೆ ಕೊಟ್ಟಿದ್ದ ಖರ್ಗೆ ಈಗ ಈ ಹೇಳಿಕೆ ನೀಡಿದರು. ಐಎಡಿಎಂಕೆ ಹೇಗೆ ಮೋದಿಯವರ ಜೊತೆ ಕೈಜೋಡಿಸಲು ಸಾಧ್ಯ? ಅವರು ಒಬ್ಬ ಟೆರರಿಸ್ಟ್​. ಅವರು ಸಮಾನತೆಯಲ್ಲಿ ನಂಬಿಕೆ ಇಟ್ಟಿಲ್ಲ. ಅವರ ಪಕ್ಷಕ್ಕೆ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಇಂತಹವರ ಜೊತೆ ಕೈಜೋಡಿಸುವುದೆಂದರೆ ಅದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದು ಎಂದೇ ಅರ್ಥ ಎಂದು ಹೇಳುವುದನ್ನೆಲ್ಲಾ ಹೇಳಿ, ಬಳಿಕ &quot;ನಾನು ಭಯೋತ್ಪಾದಕ ಎಂದರೆ ಅವರು ಎಲ್ಲರನ್ನೂ ಬೆದರಿಸುತ್ತಾರೆ (Terrorises) ಎಂಬ ಅರ್ಥದಲ್ಲಿ ಹೇಳಿದ್ದೇನೆ&quot; ಎಂದು ಸ್ಪಷ್ಟನೆ ಬೇರೆ ನೀಡಿದರು.&lt;/p&gt;&lt;h3&gt;&lt;strong&gt;ವ್ಯತ್ಯಾಸ ತಿಳಿಸಿದ ಉಪ ರಾಷ್ಟ್ರಪತಿ&lt;/strong&gt;&lt;/h3&gt;&lt;p&gt;ಆದರೆ, ಅವರ ಈ ಮಾತು ಬಿಜೆಪಿಯನ್ನು ಕೆರಳಿಸಿದೆ. ಕೆಪಿಸಿಸಿ ಅಧ್ಯಕ್ಷನ ಸ್ಥಾನದಲ್ಲಿ ಇರುವಂಥವರು ಇಂಥ ಮಾತುಗಳನ್ನಾಡುವ ಬಗ್ಗೆ ಎಲ್ಲೆಡೆ ಭಾರಿ ಟೀಕೆಗಳೂ ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್​ ಅವರು ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ. ಖರ್ಗೆ ಅವರು ಕೆಲವು ಬಾರಿ ಕಪ್ಪು ಮತ್ತು ಬಿಳುಪಿನ ಅಂದರೆ &quot;ಟೆರರಿಸ್ಟ್​ ಮತ್ತು ಟೆರರಿಸ್ಟ್​ಗಳಿಗೇ ಟೆರರ್​ ಆಗಿರುವವರ ನಡುವೆ ವ್ಯತ್ಯಾಸವನ್ನು ಗುರುತಿಸಲು ವಿಫಲರಾಗುತ್ತಾರೆ ಎಂದು ರಾಧಾಕೃಷ್ಣನ್ ಹೇಳಿದ್ದಾರೆ. ಬೀದರ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಖರ್ಗೆ ಅವರೂ ಉಪಸ್ಥಿತರಿದ್ದು, ಅವರ ಎದುರೇ ಉಪರಾಷ್ಟ್ರಪತಿ ಈ ಮಾತು ಹೇಳಿದರು.&lt;/p&gt;&lt;p&gt;ಇದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ರಮಕ್ಕೆ ಕೋರಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bidar</category>
            <dc:creator>Suchethana D</dc:creator>
            <atom:link href="https://kannada.asianetnews.com/politics/doesnt-differentiate-between-terrorists-and-terror-to-terrorists-vp-radhakrishnan-slams-kharge-suc/articleshow-3hzlyc8"/>
        </item>
        <item>
            <title><![CDATA[100 ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಘೋಷಿಸಿದ ಬೀದರ್‌ ಶಿಕ್ಷಣ ಸಂಸ್ಥೆ]]></title>
            <link>https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56</link>
            <guid isPermaLink="true">https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56</guid>
            <pubDate>Sun, 26 Apr 2026 10:01:58 +0530</pubDate>
            <description><![CDATA[&lt;p&gt;ಬೀದರ್ ಶಿಕ್ಷಣ ಸಂಸ್ಥೆಯು ಎಸ್&zwnj;ಎಸ್&zwnj;ಎಲ್&zwnj;ಸಿಯಲ್ಲಿ 95%ಕ್ಕೂ ಹೆಚ್ಚು ಅಂಕ ಗಳಿಸಿದ 100 ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಘೋಷಿಸಿದೆ. ಈ ಯೋಜನೆಯಲ್ಲಿ ಗ್ರಾಮೀಣ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಫೌಂಡೇಷನ್&zwnj; ಕೋರ್ಸ್&zwnj;ಗಳನ್ನು ಸಹ ನಡೆಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ka2kmz9ezq63cnffyr5h4qqs,imgname-7518c2f3-9195-4ab3-95cb-0b026dfcb5a3--1--1763171794222.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್&zwnj;: &lt;/strong&gt;ಪ್ರಸಕ್ತ ಸಾಲಿನ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಶೇಕಡ 95ಕ್ಕೂ ಅಧಿಕ ಅಂಕ ಗಳಿಸಿದ ರಾಜ್ಯದ 100 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷದ ಪಿಯು ಶಿಕ್ಷಣವನ್ನು ಉಚಿತವಾಗಿ ನೀಡುವುದಾಗಿ ಇಲ್ಲಿಯ ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಪ್ರಕಟಿಸಿದೆ.&lt;/p&gt;&lt;p&gt;100 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬೀದರ್&zwnj; ಸೇರಿದಂತೆ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುವುದು. ಉಚಿತ ಸ್ಥಾನಗಳಲ್ಲಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಓದಿದ, ತಂದೆಯನ್ನು ಕಳೆದುಕೊಂಡ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ ಆದ್ಯತೆ ಕೊಡಲಾಗುವುದು ಎಂದು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್&zwnj; ಖದೀರ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ಉಚಿತ ಶಿಕ್ಷಣ ಯೋಜನೆಯ ಉದ್ದೇಶವಾಗಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಬೋಧನಾ ಶುಲ್ಕದ ಸಂಪೂರ್ಣ ರಿಯಾಯಿತಿ ಇರಲಿದೆ. ಅರ್ಹ ವಿದ್ಯಾರ್ಥಿಗಳು ಸಮೂಹದ ಪದವಿ ಪೂರ್ವ ಕಾಲೇಜುಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಎಐಸಿಯುಗೆ ಶೇ.100 ಫಲಿತಾಂಶ&lt;/strong&gt;&lt;/h2&gt;&lt;p&gt;ಶಾಲೆ ಬಿಟ್ಟ ಹಾಗೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಮರಳಿ ಮುಖ್ಯವಾಹಿನಿಗೆ ತರಲು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಆರಂಭಿಸಿದ ಶೈಕ್ಷಣಿಕ ತುರ್ತು ನಿಗಾ ಘಟಕ (ಎಐಸಿಯು) ಪರಿಣಾಮಕಾರಿ ಫಲಿತಾಂಶ ನೀಡುತ್ತಾ ಮುನ್ನಡೆದಿದೆ. ಶಾಲೆ ಬಿಟ್ಟ 90 ವಿದ್ಯಾರ್ಥಿಗಳು ಇಲ್ಲಿಯ ಶಾಹೀನ್&zwnj; ಪ್ರೌಢಶಾಲೆಯಲ್ಲಿ ಈ ಬಾರಿಯ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಶಾಹೀನ್&zwnj; ತುರ್ತು ಶೈಕ್ಷಣಿಕ ನಿಗಾ ಘಟಕದಲ್ಲಿ ಓದಿದವರಾಗಿರುವುದು ವಿಶೇಷ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;p&gt;ವಿಶೇಷ ನಿಗಾ ಮೂಲಕ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಮುಖ್ಯವಾಹಿನಿಗೆ ತರುವ ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಶಾಹೀನ್&zwnj; ಶೈಕ್ಷಣಿಕ ತುರ್ತು ನಿಗಾ ಘಟಕದ ಮಾದರಿಯನ್ನು ಪ್ರಶಂಸಿಸಿರುವ ಜಾಗತಿಕ ಮಟ್ಟದ ನಿಯತಕಾಲಿಕೆಯ ಭಾರತೀಯ ಆವೃತ್ತಿಯಾದ ಫೋರ್ಬ್ಸ್&zwnj; ಇಂಡಿಯಾ, ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್&zwnj; ಖದೀರ್&zwnj; ಅವರನ್ನು ''''&lsquo;ಲೀಡರ್&zwnj; ಆಫ್&zwnj; ಟುಮಾರೋ&rsquo; ಎಂದು ಗುರುತಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಎಸ್ಸೆಸ್ಸೆಲ್ಸಿ ಕನ್ನಡದಲ್ಲಿ ಫೇಲಾಗಿದ್ದು ಮಕ್ಕಳಷ್ಟೇ ಅಲ್ಲ; ಅಮುಲಾಗ್ರ ಬದಲಾವಣೆಗೆ ತಜ್ಞರ ಒತ್ತಡ&lt;/strong&gt;&lt;/p&gt;&lt;h3&gt;&lt;strong&gt;ಪ್ರಿ ಪ್ಲಸ್&zwnj; ಟು ಫೌಂಡೇಷನ್&zwnj; ಕೋರ್ಸ್&amp;nbsp;&lt;/strong&gt;&lt;/h3&gt;&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿಯಲ್ಲಿ ಉತ್ತೀರ್ಣ, ಅನುತ್ತೀರ್ಣರಾದವರಿಗೆ ವಿಷಯಗಳ ಮೇಲೆ ಹಿಡಿತವಿಲ್ಲದ, ವಿಷಯಗಳನ್ನು ಅರಿತುಕೊಳ್ಳಲಾಗದ ವಿದ್ಯಾರ್ಥಿಗಳ ನೀಟ್&zwnj; / ಜೆಇಇ ಕನಸು ಸಾಕಾರಗೊಳಿಸಲು ಶಾಹೀನ್&zwnj; ಶಿಕ್ಷಣ ಸಂಸ್ಥೆಗಳ ಸಮೂಹ ಮೂರು ವರ್ಷದ ಪ್ರಿ ಪ್ಲಸ್&zwnj; ಟು ಫೌಂಡೇಷನ್&zwnj; ಕೋರ್ಸ್ ಸಹ ಆರಂಭಿಸಿದೆ ಎಂದು ಅಬ್ದುಲ್&zwnj; ಖದೀರ್&zwnj; ತಿಳಿಸಿದ್ದಾರೆ.&lt;/p&gt;&lt;p&gt;ಶಾಹೀನ್&zwnj; ವೆಬ್ಸೈಟ್ &lt;strong&gt;https://shaheengroup.org&lt;/strong&gt; ಹಾಗೂ ಟೋಲ್&zwnj; ಫ್ರೀ ಸಂಖ್ಯೆ&lt;strong&gt; 1800 121 6235&lt;/strong&gt; ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೊನೆಗೂ ಅಂಧ ವಿದ್ಯಾರ್ಥಿನಿಗೆ ಅಂಕದ ಬೆಳಕು ನೀಡಿದ SSLC ಬೋರ್ಡ್! ಫೇಲಾದ ಹುಡಗಿಗೆ ಈಗ 603 ಅಂಕ!&lt;/strong&gt;&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bidar-shaheen-group-educational-institute-announces-free-pu-education-for-100-students/articleshow-47u1i56"/>
        </item>
        <item>
            <title><![CDATA[ಬಂಗಾರದ ಮನುಷ್ಯನ ಸೈಕಲ್ ಸವಾರಿ ಹಿಂದಿದೆ ರಹಸ್ಯ; ಮೋದಿ ಮಾತಿನಿಂದ ಐಷಾರಾಮಿ ಕಾರಿಗೆ ಟಾಟಾ ಹೇಳಿದ ಚಿನ್ನದ ವ್ಯಾಪಾರಿ!]]></title>
            <link>https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747</link>
            <guid isPermaLink="true">https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747</guid>
            <pubDate>Fri, 15 May 2026 17:53:52 +0530</pubDate>
            <description><![CDATA[&lt;p&gt;ಬಸವಕಲ್ಯಾಣದ ಚಿನ್ನದ ವ್ಯಾಪಾರಿ ರೇವಣಪ್ಪ, ಪ್ರಧಾನಿ ಮೋದಿಯವರ ಇಂಧನ ಉಳಿತಾಯದ ಕರೆಯಿಂದ ಪ್ರೇರಿತರಾಗಿ, ತಮ್ಮ ಐಷಾರಾಮಿ ಕಾರನ್ನು ಬಿಟ್ಟು ಸೈಕಲ್&zwnj;ನಲ್ಲಿ ಅಂಗಡಿಗೆ ತೆರಳುತ್ತಿದ್ದಾರೆ. ಅವರ ಈ ನಡೆ ಇಂಧನ ಉಳಿತಾಯ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರುತ್ತಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krns5kncv3nc2nzhfznhpdtt,imgname-bidar-jewellery-shop-owner-1778847501996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ 15): ಇಂ&lt;/strong&gt;ದಿನ ಕಾಲದಲ್ಲಿ ಶ್ರೀಮಂತಿಕೆ ಎಂದರೆ ಐಷಾರಾಮಿ ಕಾರುಗಳು, ಬೈಕುಗಳು ಮತ್ತು ವೈಭವದ ಜೀವನ. ಅದರಲ್ಲೂ ಚಿನ್ನದ ಅಂಗಡಿಯ ಮಾಲೀಕರು ಅಂದಮೇಲೆ ಅವರ ಜೀವನಶೈಲಿ ಹೇಗಿರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಬೀದರ್ ಜಿಲ್ಲೆಯ ಬಸವಕಲ್ಯಾಣದ ಚಿನ್ನದ ವ್ಯಾಪಾರಿಯೊಬ್ಬರು ಇದಕ್ಕೆ ಅಪವಾದ ಎಂಬಂತೆ ನಡೆದುಕೊಂಡು ಎಲ್ಲರ ಗಮನ ಸೆಳೆಯುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಐಷಾರಾಮಿ ಕಾರು ಬಿಟ್ಟು ಸೈಕಲ್ ಮೊರೆ:&lt;/strong&gt;&lt;/h3&gt;&lt;p&gt;ಬಸವಕಲ್ಯಾಣ ನಗರದಲ್ಲಿ ಬಂಗಾರದ ಅಂಗಡಿ ಹೊಂದಿರುವ ರೇವಣಪ್ಪ ಅವರು ಪ್ರತಿದಿನ ತಮ್ಮ ಐಷಾರಾಮಿ ಕಾರಿನಲ್ಲೇ ಅಂಗಡಿಗೆ ತೆರಳುತ್ತಿದ್ದರು. ಆದರೆ, ಇಂದು ರೇವಣಪ್ಪ ಅವರು ತಮ್ಮ ಕಾರು ಮತ್ತು ಬೈಕುಗಳನ್ನು ಮನೆಯಲ್ಲೇ ಬಿಟ್ಟು ಸೈಕಲ್ ತುಳಿಯುತ್ತಾ ಅಂಗಡಿಗೆ ಬಂದಿದ್ದಾರೆ. ಸುಡುವ ಬಿಸಿಲನ್ನೂ ಲೆಕ್ಕಿಸದೆ ಸುಮಾರು 2 ಕಿಲೋಮೀಟರ್ ಸೈಕಲ್ ತುಳಿದು ಅವರು ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.&lt;/p&gt;&lt;h2&gt;&lt;strong&gt;ಪ್ರಧಾನಿ ಮೋದಿ ಮಾತೇ ಪ್ರೇರಣೆ:&lt;/strong&gt;&lt;/h2&gt;&lt;p&gt;ರೇವಣಪ್ಪ ಅವರು ಇಂತಹದೊಂದು ನಿರ್ಧಾರ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಪ್ರೇರಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ಇಂಧನ ಉಳಿಸುವುದು ಅತ್ಯಂತ ಅವಶ್ಯಕವಾಗಿದೆ. ಪ್ರಧಾನಿ ಮೋದಿ ಅವರು ಇಂಧನ ಉಳಿತಾಯದ ಬಗ್ಗೆ ನೀಡಿದ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ರೇವಣಪ್ಪ, &quot;ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆಯೂ ಮುಖ್ಯ. ನಾವು ಇಂಧನ ಉಳಿಸಿದರೆ ಅದು ದೇಶದ ಆರ್ಥಿಕತೆಗೆ ಸಹಾಯವಾಗುತ್ತದೆ. ಹೀಗಾಗಿ ಇಂದಿನಿಂದ ಸೈಕಲ್ ಮೂಲಕವೇ ಸಂಚರಿಸಲು ನಿರ್ಧರಿಸಿದ್ದೇನೆ&quot; ಎಂದು ಹೆಮ್ಮೆಯಿಂದ ಹೇಳಿದ್ದಾರೆ.&lt;/p&gt;&lt;h3&gt;&lt;strong&gt;ಆರೋಗ್ಯ ಮತ್ತು ಪರಿಸರ ಎರಡಕ್ಕೂ ಲಾಭ:&lt;/strong&gt;&lt;/h3&gt;&lt;p&gt;ಕೇವಲ ಇಂಧನ ಉಳಿತಾಯ ಮಾತ್ರವಲ್ಲದೆ, ಸೈಕಲ್ ಬಳಕೆಯಿಂದ ಆರೋಗ್ಯ ವೃದ್ಧಿಸುತ್ತದೆ ಮತ್ತು ಪರಿಸರ ಮಾಲಿನ್ಯವೂ ಕಡಿಮೆಯಾಗುತ್ತದೆ ಎಂಬ ಸಂದೇಶವನ್ನು ರೇವಣಪ್ಪ ನೀಡಿದ್ದಾರೆ. ಬಸವಕಲ್ಯಾಣದ ರಸ್ತೆಯಲ್ಲಿ ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು ಸೈಕಲ್ ತುಳಿಯುತ್ತಿರುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಲ್ಲದೆ, ಅವರ ಸರಳತೆ ಮತ್ತು ದೇಶಪ್ರೇಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ದೇಶದ ಹಿತಕ್ಕಾಗಿ ಸಣ್ಣ ಬದಲಾವಣೆ ಮಾಡಿಕೊಳ್ಳುವುದು ದೊಡ್ಡ ವಿಷಯವಲ್ಲ. ನಾವೆಲ್ಲರೂ ವಾರದಲ್ಲಿ ಕನಿಷ್ಠ ಒಂದು ದಿನವಾದರೂ ಇಂಧನ ಬಳಸದ ವಾಹನಗಳನ್ನು ಅಥವಾ ಸೈಕಲ್ ಬಳಸಿದರೆ ದೇಶಕ್ಕೆ ದೊಡ್ಡ ಲಾಭವಾಗಲಿದೆ'ಎಂಬುದು ರೇವಣಪ್ಪ ಅವರ ಮನವಿಯಾಗಿದೆ. ಬಸವಕಲ್ಯಾಣದ ಈ ಬಂಗಾರದ ವ್ಯಾಪಾರಿಯ ನಡೆ ಈಗ ಸೋಷಿಯಲ್ ಮೀಡಿಯಾದಲ್ಲೂ ಸಖತ್ ವೈರಲ್ ಆಗುತ್ತಿದೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/basavakalyan-gold-shop-owner-revannappa-switches-to-bicycle-from-luxury-car-to-save-fuel-inspired-by-pm-modi-sat/articleshow-8amo747"/>
        </item>
        <item>
            <title><![CDATA[ಬೀದರ್‌ನಲ್ಲಿ ಅಚ್ಚರಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ, ಅಮ್ಮನಿಗಿದು ಎರಡನೇ ಹೆರಿಗೆ]]></title>
            <link>https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq</link>
            <guid isPermaLink="true">https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq</guid>
            <pubDate>Fri, 24 Apr 2026 18:04:48 +0530</pubDate>
            <description><![CDATA[ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಬಸಮ್ಮ ಎಂಬ ಮಹಿಳೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಮ್ಮ ಎರಡನೇ ಹೆರಿಗೆಯಲ್ಲಿ ಎರಡು ಗಂಡು ಮತ್ತು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಸದ್ಯ ನವಜಾತ ಶಿಶುಗಳನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpzqez8ewsswy3539n93fhth,imgname-bidar-woman-delivers-triplets-1777033772302.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್&lt;/strong&gt; ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ಬ್ರಿಮ್ಸ್ (Bidar Institute of Medical Sciences) ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಒಂದೇ ಬಾರಿ ಮೂರು ಮಕ್ಕಳಿಗೆ ಜನ್ಮ ನೀಡಿರುವುದು ಗಮನಸೆಳೆದಿದೆ.&lt;/p&gt;&lt;p&gt;ಹುಮನಾಬಾದ್ ತಾಲೂಕಿನ ವಡ್ಡನಕೇರಾ ಗ್ರಾಮದ ಬಸಮ್ಮ ಎಂಬ ಮಹಿಳೆ ಈ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದಾರೆ. ಈಗಾಗಲೇ ಒಂದು ಮಗುವಿಗೆ ಜನ್ಮ ನೀಡಿದ್ದ ಬಸಮ್ಮ, ತನ್ನ ಎರಡನೇ ಹೆರಿಗೆಯ ಸಂದರ್ಭದಲ್ಲಿ ಈ ಬಾರಿ ಮೂರು ಮಕ್ಕಳಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ.&lt;/p&gt;&lt;h2&gt;ಯಶಸ್ವಿ ಹೆರಿಗೆ&lt;/h2&gt;&lt;p&gt;ಬಸಮ್ಮ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಯಶಸ್ವಿ ಹೆರಿಗೆ ನಡೆದಿದೆ. ಈ ವೇಳೆ ಅವರು ಎರಡು ಗಂಡು ಮಕ್ಕಳಿಗೂ ಒಂದು ಹೆಣ್ಣು ಮಗುವಿಗೂ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯರು ತಕ್ಷಣವೇ ಅಗತ್ಯ ಚಿಕಿತ್ಸೆ ಒದಗಿಸಿದ್ದಾರೆ.&lt;/p&gt;&lt;h2&gt;ಆರೋಗ್ಯವಾಗಿರುವ ಮಗು&lt;/h2&gt;&lt;p&gt;ಪ್ರಸ್ತುತ, ಮೂರು ನವಜಾತ ಶಿಶುಗಳನ್ನು ತುರ್ತು ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಮಕ್ಕಳು ಮತ್ತು ತಾಯಿಯ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ.&lt;/p&gt;&lt;p&gt;ಈ ಅಪರೂಪದ ಘಟನೆ ಕುಟುಂಬದಲ್ಲಿ ಸಂತಸ ಮೂಡಿಸಿದ್ದು, ಸ್ಥಳೀಯರಲ್ಲಿ ಕುತೂಹಲಕ್ಕೂ ಕಾರಣವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿಯೂ ಇಂತಹ ಘಟನೆಗಳು ಅಪರೂಪವಾಗಿರುವುದರಿಂದ, ವೈದ್ಯರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/rare-birth-in-bidar-woman-delivers-triplets-at-brims-hospital-gdp/articleshow-az9i8mq"/>
        </item>
        <item>
            <title><![CDATA[ಸಿಲಿಂಡರ್‌ಗೆ ಮಧ್ಯರಾತ್ರಿಯಿಂದ್ಲೇ ಕ್ಯೂ, ಪೆಟ್ರೋಲ್‌ ‘ನೋ ಸ್ಟಾಕ್‌’! ಭಾಲ್ಕಿ, ಬಳ್ಳಾರಿಯಲ್ಲಿ ಜನರ ಪರದಾಟ]]></title>
            <link>https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug</link>
            <guid isPermaLink="true">https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug</guid>
            <pubDate>Mon, 18 May 2026 06:04:12 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ರಾಜ್ಯದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಬೀದರ್&zwnj;ನ ಭಾಲ್ಕಿಯಲ್ಲಿ ಗ್ಯಾಸ್&zwnj; ಸಿಲಿಂಡರ್&zwnj;ಗಳಿಗಾಗಿ ಹಾಗೂ ಬಳ್ಳಾರಿಯಲ್ಲಿ ಪೆಟ್ರೋಲ್&zwnj;ಗಾಗಿ ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr3rwv0hk7vmf4gw4kkkdtwq,imgname-save-gas-cylinder-life--1--1778243234833.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಾಲ್ಕಿ/ಬಳ್ಳಾರಿ: &lt;/strong&gt;ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಇಂಧನ ಹಾಗೂ ಎಲ್&zwnj;ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೀದರ್&zwnj; ಜಿಲ್ಲೆಯ ಭಾಲ್ಕಿಯಲ್ಲಿ ಗ್ಯಾಸ್&zwnj; ಸಿಲಿಂಡರ್&zwnj;ಗೆ ಹಾಗೂ ಬಳ್ಳಾರಿಯಲ್ಲಿ ಪೆಟ್ರೋಲ್&zwnj;ಗಾಗಿ ಜನರು ಪರದಾಡುವಂತಾಗಿದೆ.&lt;/p&gt;&lt;h2&gt;&lt;strong&gt;ಸುಮಾರು 1 ಕಿಲೋ ಮೀಟರ್&zwnj; ಸಾಲು&lt;/strong&gt;&lt;/h2&gt;&lt;p&gt;ಗ್ಯಾಸ್&zwnj; ಸಿಲಿಂಡರ್ ಸಿಗುತ್ತೋ, ಇಲ್ಲವೋ ಎಂಬ ಆತಂಕದಲ್ಲಿ ಭಾನುವಾರ ಬೆಳ್ಳಂ ಬೆಳಗ್ಗೆ ಭಾಲ್ಕಿ ಪಟ್ಟಣದ ಭಾರತ್&zwnj; ಗ್ಯಾಸ್&zwnj; ಏಜೆನ್ಸಿಯ ಕಚೇರಿ ಮುಂದೆ ನೂರಾರು ಗ್ರಾಹಕರು ಜಮಾಯಿಸಿದ್ದು, ಗ್ಯಾಸ್&zwnj; ಸಿಲಿಂಡರ್&zwnj;ಗಳನ್ನು ಕ್ಯೂನಲ್ಲಿ ಇಟ್ಟಿದ್ದರು. ಸುಮಾರು 1 ಕಿಲೋ ಮೀಟರ್&zwnj; ದೂರದವರೆಗೆ ಸಿಲಿಂಡರ್&zwnj;ಗಳು ಸರತಿ ಸಾಲಿನಲ್ಲಿಟ್ಟಿದ್ದು ಕಂಡು ಬಂತು.&lt;/p&gt;&lt;p&gt;ಹಲವರು ಮಧ್ಯರಾತ್ರಿಯಿಂದಲೇ ಸಿಲಿಂಡರ್&zwnj; ಪಡೆಯಲು ಸಾಲುಗಟ್ಟಿ ನಿಂತ&zwnj;ರೆ, ಮಹಿಳೆಯರು, ವೃದ್ಧರು ತಮ್ಮ, ತಮ್ಮ ಖಾಲಿ ಸಿಲಿಂಡರ್&zwnj; ಮೇಲೆಯೇ ಕುಳಿತುಕೊಂಡು ಸಮಯ ಕಳೆದಿದ್ದಾರೆ. ಭಾಲ್ಕಿಯಲ್ಲಿ ಭಾರತ್&zwnj; ಗ್ಯಾಸ್&zwnj;ನ ಒಂದೇ ಒಂದು ಏಜೆನ್ಸಿ ಇರುವ ಕಾರಣ ಸಿಲಿಂಡರ್&zwnj; ಕೊರತೆಯಿಂದ ಜನರು ಪರದಾಡುವಂತಾಗಿದೆ. ನೂರಾರು ಜನ ಸೇರಿದ್ದರಿಂದ ಪೊಲೀಸರನ್ನು ಕರೆಸಿ, ಎಲ್ಲರಿಗೂ ಸಿಲಿಂಡರ್&zwnj; ಸಿಗುವಂತೆ ಮಾಡಲಾಯಿತು.&lt;/p&gt;&lt;h3&gt;&lt;strong&gt;ಹೊಸ ಬೈಕ್&zwnj;ಗೂ ಸಿಗಲಿಲ್ಲ ಪೆಟ್ರೋಲ್&lt;/strong&gt;&lt;/h3&gt;&lt;p&gt;ಬಳ್ಳಾರಿಯ ಎಚ್&zwnj;.ಪಿ.ಪೆಟ್ರೋಲ್&zwnj; ಬಂಕ್&zwnj;ನಲ್ಲಿ ಪೆಟ್ರೋಲ್&zwnj; ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಹೊಸ ಬೈಕ್&zwnj; ಖರೀದಿಸಿದ್ದ ಗ್ರಾಹಕನೊಬ್ಬ ಪೆಟ್ರೋಲ್&zwnj; ಸಿಗದೆ ಸುಮಾರು 2 ಕಿ.ಮೀ. ದೂರ ಬೈಕ್&zwnj; ತಳ್ಳಿಕೊಂಡು ಬಂದಿದ್ದ. ಭಾನುವಾರ ಬೆಳಗ್ಗೆಯಿಂದಲೇ ಸ್ಟಾಕ್&zwnj; ಇಲ್ಲದೆ, ಬಂಕನ್ನು ಬಂದ್&zwnj; ಮಾಡಲಾಗಿತ್ತು.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/queues-for-cylinders-since-midnight-petrol-no-stock-people-s-procession-in-bhalki-ballari-mrq/articleshow-e6c1lug"/>
        </item>
        <item>
            <title><![CDATA[ಕಮರ್ಷಿಯಲ್ ಗ್ಯಾಸ್ ಬೆಲೆ ₹993 ಏರಿಕೆ; ಸಂಕಷ್ಟದಲ್ಲಿ ಹೋಟೆಲ್  ಉದ್ದಿಮೆ, ತಿಂಡಿ ಬೆಲೆ ಇನ್ನಷ್ಟು ಹೆಚ್ಚಳದ ಬಗ್ಗೆ ಚರ್ಚೆ!]]></title>
            <link>https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i</link>
            <guid isPermaLink="true">https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i</guid>
            <pubDate>Sat, 02 May 2026 05:02:12 +0530</pubDate>
            <description><![CDATA[&lt;p&gt;Hotel Gas Up by ₹993 ಬೀದರ್&zwnj;ನಲ್ಲಿ ಕಮರ್ಷಿಯಲ್ ಎಲ್&zwnj;ಪಿಜಿ ಗ್ಯಾಸ್ ಬೆಲೆ ₹993 ಏರಿಕೆಯಾಗಿದ್ದು, ಹೊಟೇಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ತಿಂಡಿ ತಿನಿಸುಗಳ ಬೆಲೆ ಹೆಚ್ಚಿಸಿದ್ದು, ಮತ್ತೊಮ್ಮೆ ಬೆಲೆ ಏರಿಕೆ ಮಾಡಿದರೆ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqjy3ng1fng86cnwfn8mwqw4,imgname-----------------------2026-05-02t050057.673-1777678276097.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ (ಮೇ.2): ದೇಶಾದ್ಯಂತ ಕಮರ್ಷಿಯಲ್ ಎಲ್&zwnj;ಪಿಜಿ ಗ್ಯಾಸ್ ಬೆಲೆ ಏರಿಕೆ ಶುಕ್ರವಾರದಿಂದ ಜಾರಿಯಾದ ಹಿನ್ನೆಲೆ ಜಿಲ್ಲೆಯ ಹೊಟೇಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ.&lt;/p&gt;&lt;p&gt;ಏಕಾಏಕಿ ಕಮರ್ಷಿಯಲ್ ಗ್ಯಾಸ್ ಬೆಲೆ 993 ಏರಿಕೆ ಮಾಡಿದ್ದು, ಬೆಳಂಬೆಳಗ್ಗೆ ಹೊಟೇಲ್ ಮಾಲಿಕರಿಗೆ ಶಾಕ್ ಆಗಿದೆ. ಈಗಾಗಲೇ ಬೆಳಗಿನ ಉಪಾಹಾರ ಸೇರಿದಂತೆ ಹೊಟೇಲ್ ತಿಂಡಿಯ ಬೆಲೆ 15 ರಿಂದ 20 ರು. ಏರಿಕೆ ಮಾಡಲಾಗಿದೆ. ಈಗ ಮತ್ತೆ ಬೆಲೆ ಹೆಚ್ಚಳ ಮಾಡಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವುದಂತೂ ಗ್ಯಾರಂಟಿ ಎನ್ನುತ್ತಾರೆ ಹೊಟೇಲ್&zwnj; ಮಾಲೀಕರು.&lt;/p&gt;&lt;p&gt;ಇರಾನ್ - ಇಸ್ರೇಲ್ ವಾರ್ ಎಫೆಕ್ಟ್&zwnj;ನಿಂದ ಇಂಧನ ಪೂರೈಕೆ ವ್ಯತ್ಯಯದಿಂದ ಬೆಲೆ ಏರಿಕೆಯಾಗುತ್ತಿದ್ದು, ಕಳೆದ ಮೂರು ತಿಂಗಳಲ್ಲಿ ಸತತ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಳ ಆಗಿದೆ. ಮಾರ್ಚ್&zwnj; ತಿಂಗಳಿನಲ್ಲಿ 144 ರು. ಏಪ್ರಿಲ್&zwnj;ನಲ್ಲಿ 190 ಹಾಗೂ ಈಗ 993 ರು. ಏರಿಕೆಯಾಗಿದೆ. ಹೀಗೆ ಸತತ ಗ್ಯಾಸ್ ದರ ಏರಿಕೆಯಿಂದ ಹೊಟೇಲ್ ಉದ್ಯಮಕ್ಕೆ ದೊಡ್ಡ ಹೊರೆ ಬಿದ್ದಿದ್ದು, ಹೋಟೆಲ್ ಉದ್ಯಮ ನಡೆಸೋದಕ್ಕೂ ಕಷ್ಟ ಆಗ್ತಿದೆ ಎನ್ನುತ್ತಾರೆ ಮಾಲಿಕರು.&lt;/p&gt;&lt;p&gt;ಗ್ಯಾಸ್ ಬೆಲೆ ಹೆಚ್ಚಳದಿಂದ ಹೋಟೆಲ್ ಮುಚ್ಚಿದರೂ ಬಾಡಿಗೆ ಕಟ್ಟಬೇಕು. ಕಾರ್ಮಿಕರಿಗೆ ವೇತನ ನೀಡಬೇಕು. ನಾವು ಏನು ಮಾಡಬೇಕು ತಿಳಿಯುತ್ತಿಲ್ಲ. ಹೊಟೇಲ್ ಮಾಲಿಕರ ಸಂಘದ ಸಭೆ ನಡೆಸಿ ಅದರಲ್ಲಿ ತಿಂಡಿಯ ಬೆಲೆ ಹೆಚ್ಚಳ ಮಾಡಬೇಕು. ಎನ್ನುವುದರ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೊಟೇಲ್ ಮಾಲೀಕ ಮೂರ್ತಿ ಹೇಳಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rs-993-increase-hotel-industry-struggles-as-commercial-gas-prices-skyrocket-rav/articleshow-eazkc0i"/>
        </item>
        <item>
            <title><![CDATA[ಕಸಾಯಿಖಾನೆಗೆ ಸಾಗಿಸುತ್ತಿದ್ದ ಲಾರಿ ಅಡ್ಡಗಟ್ಟಿ 23 ಹಸು ರಕ್ಷಿಸದ ಶಾಸಕ ಶರಣು ಸಲಗರ; ಒಂದು ಎತ್ತು ಸಾವು]]></title>
            <link>https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v</link>
            <guid isPermaLink="true">https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v</guid>
            <pubDate>Sun, 26 Apr 2026 11:12:22 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 23ಕ್ಕೂ ಹೆಚ್ಚು ಜಾನುವಾರುಗಳನ್ನು ಬಸವಕಲ್ಯಾಣ ಶಾಸಕ ಶರಣು ಸಲಗರ ರಕ್ಷಿಸಿದ್ದಾರೆ. 3 ಗೂಡ್ಸ್ ವಾಹನಗಳಲ್ಲಿ ಅಮಾನವೀಯವಾಗಿ ತುಂಬಿದ್ದರಿಂದ ಉಸಿರುಗಟ್ಟಿ ಒಂದು ಎತ್ತು ಸಾವನ್ನಪ್ಪಿದ್ದು, ಶಾಸಕರು ದಂಧೆಕೋರರ ವಿರುದ್ಧ ದೂರು ದಾಖಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq44tj6f4hz3arbfqe4exjt4,imgname-screenshot-2026-04-26-110103-1777182001358.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಏ.26): ಜಿ&lt;/strong&gt;ಲ್ಲೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಜಾಲ ಮತ್ತೆ ಹೆಡೆಎತ್ತುತ್ತಿದ್ದು, ಇಂದು ಸ್ವತಃ ಶಾಸಕರೊಬ್ಬರು ರಸ್ತೆಗಿಳಿದು ಅಕ್ರಮ ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ಅವರು ಮೂರು ಗೂಡ್ಸ್ ವಾಹನಗಳ ಮೇಲೆ ಧಿಡೀರ್ ದಾಳಿ ನಡೆಸಿ, ಅಮಾನವೀಯವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 23ಕ್ಕೂ ಅಧಿಕ ಜಾನುವಾರುಗಳನ್ನು ರಕ್ಷಿಸಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಚಿಟ್ಟಾ ಕ್ರಾಸ್ ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಮೂರು ಗೂಡ್ಸ್ ವಾಹನಗಳಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶಾಸಕ ಶರಣು ಸಲಗರ್ ಅವರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ತಡೆದರು. ಈ ವೇಳೆ ವಾಹನಗಳನ್ನು ಪರಿಶೀಲಿಸಿದಾಗ ಅಲ್ಲಿನ ದೃಶ್ಯ ಅತ್ಯಂತ ಮನಕಲಕುವಂತಿತ್ತು.&lt;/p&gt;&lt;h2&gt;&lt;strong&gt;ಉಸಿರುಗಟ್ಟಿ ಪ್ರಾಣ ಬಿಟ್ಟ ಎತ್ತು:&lt;/strong&gt;&lt;/h2&gt;&lt;p&gt;ಆಕಳುಗಳು, ಕರುಗಳು, ಎತ್ತುಗಳು ಹಾಗೂ ಎಮ್ಮೆ ಕರುಗಳನ್ನು ಯಾವುದೇ ಕನಿಷ್ಠ ನಿಯಮಗಳನ್ನು ಪಾಲಿಸದೆ, ಉಸಿರುಗಟ್ಟುವಂತೆ ವಾಹನಗಳಲ್ಲಿ ತುರುಕಲಾಗಿತ್ತು. ಕೇವಲ ಒಂದು ವಾಹನದಲ್ಲಿ ಮಿತಿಮೀರಿದ ಅಂದರೆ ಆರು ದೊಡ್ಡ ಜಾನುವಾರುಗಳನ್ನು ತುಂಬಿದ್ದರಿಂದ, ಗಾಳಿ ಸಿಗದೆ ಎತ್ತುವೊಂದು ವಾಹನದಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಚಾಲಕರಿಗೆ ಶಾಸಕರಿಂದ ಕ್ಲಾಸ್:&lt;/strong&gt;&lt;/h2&gt;&lt;p&gt;ಜಾನುವಾರುಗಳ ಮೇಲಿನ ಕ್ರೌರ್ಯ ಕಂಡ ಶಾಸಕ ಸಲಗರ್ ಚಾಲಕರ ಮೇಲೆ ಕೆಂಡಾಮಂಡಲರಾದರು. &quot;ಹೊಟ್ಟೆ ತುಂಬಿಸಿಕೊಳ್ಳಲು ಬೇರೆ ಕೆಲಸ ಮಾಡಿ, ಈ ರೀತಿ ಮೂಕ ಪ್ರಾಣಿಗಳನ್ನು ಕೊಲ್ಲುವುದು ಎಷ್ಟು ಸರಿ? ನಿಮ್ಮ ಹೆಂಡತಿ, ಮಕ್ಕಳನ್ನು ಇದೇ ರೀತಿ ಅಮಾನವೀಯವಾಗಿ ವಾಹನದಲ್ಲಿ ತುಂಬಿ ಸಾಗಿಸ್ತೀರಾ? ಪ್ರಾಣಿಗಳ ಮೇಲೆ ಯಾಕಿಷ್ಟು ಕ್ರೌರ್ಯ?&quot; ಎಂದು ಚಾಲಕರನ್ನು ತರಾಟೆಗೆ ತೆಗೆದುಕೊಂಡರು.&lt;/p&gt;&lt;p&gt;ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, &quot;ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದಲೇ ಇಂತಹ ಅಕ್ರಮ ದಂಧೆಕೋರರಿಗೆ ಲೈಸೆನ್ಸ್ ಸಿಕ್ಕಂತಾಗಿದೆ. ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ&quot; ಎಂದು ದೂರಿದರು.&lt;/p&gt;&lt;p&gt;&lt;strong&gt;ಪೊಲೀಸ್ ಕ್ರಮ:&lt;/strong&gt;&lt;/p&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಮಂಠಾಳ ಪೊಲೀಸ್ ಠಾಣೆಯ ಪಿಎಸ್ಐ ಸುವರ್ಣ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶರಣು ಸಲಗರ್ ಅವರು ಅಕ್ರಮ ದಂಧೆಕೋರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ರಕ್ಷಿಸಲಾದ 23 ಜಾನುವಾರುಗಳನ್ನು ತಕ್ಷಣವೇ ಹತ್ತಿರದ ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.&lt;/p&gt;&lt;p&gt;ಬೀದರ್ ಜಿಲ್ಲೆಯ ಗಡಿ ಭಾಗಗಳಲ್ಲಿ ಇಂತಹ ಅಕ್ರಮ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bidar-mla-sharanu-salagar-raids-illegal-cattle-smuggling-23-cattle-rescued-one-ox-dead-sat/articleshow-fetlh6v"/>
        </item>
        <item>
            <title><![CDATA[ಬೀದರ್‌ನಲ್ಲೊಂದು ಮನುಕುಲವೇ ತಲೆತಗ್ಗಿಸುವ ಘಟನೆ ಚರಂಡಿಯಲ್ಲಿ ಆಗಷ್ಟೇ ಹುಟ್ಟಿದ ಶಿಶುವಿನ ಶವ ಪತ್ತೆ!]]></title>
            <link>https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h</link>
            <guid isPermaLink="true">https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h</guid>
            <pubDate>Mon, 11 May 2026 21:15:49 +0530</pubDate>
            <description><![CDATA[ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ, ಕಿರಾಣಿ ಅಂಗಡಿಯ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಹುಟ್ಟಿದ ಮಗುವನ್ನು ರಾತ್ರೋರಾತ್ರಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಅಮಾನವೀಯ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krbv4z28fsdbe85ab3g1pd44,imgname-bidar-newborn-baby-case--1--1778514033687.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್: &lt;/strong&gt;ಜೀವನದಲ್ಲಿ ಅದೆಷ್ಟೋ ಜನ ಮಕ್ಕಳಿಲ್ಲದೆ ಕೊರಗುತ್ತಿದ್ದಾರೆ. ಅದೆಷ್ಟೋ ಮಂದಿ ಮಕ್ಕಳನ್ನು ಪಡೆಯಲು ವರ್ಷಾನುಗಟ್ಟಲೆ ಚಿಕಿತ್ಸೆ ತೆಗೆದುಕೊಳ್ಳುತ್ತಾರೆ. ಇನ್ನು ಕೆಲವರು ಐವಿಎಫ್ ಮೊರೆ ಹೋಗುತ್ತಿದ್ದಾರೆ. ಆದರೆ ಇಂತಹ ಸನ್ನಿವೆಶದ ನಡುವೆ ಬೀದರ್&zwnj; ನಲ್ಲಿ ಮನುಕುಲವೇ ತಲೆತಗ್ಗಿಸುವ ಹೃದಯವಿದ್ರಾವಕ ಘಟನೆ ನಡೆದಿದೆ. ಇಲ್ಲಿನ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಬಸವೇಶ್ವರ ವೃತ್ತದ ಸಮೀಪ ಇರುವ ಕಿರಾಣಿ ಅಂಗಡಿ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಹೆತ್ತವರು ಮಾನವೀಯತೆಯನ್ನು ಮರೆತು ಮಗುವನ್ನು ಬೀದಿ ಹೆಣ ಮಾಡಿದ್ದಾರೆ.&lt;/p&gt;&lt;h2&gt;ಚರಂಡಿಯಲ್ಲಿ ಕಾಣಿಸಿದ ಅನುಮಾನಾಸ್ಪದ ವಸ್ತು&lt;/h2&gt;&lt;p&gt;ಸ್ಥಳೀಯರು ಬೆಳಿಗ್ಗೆ ಚರಂಡಿಯಲ್ಲಿ ಏನೋ ಅನುಮಾನಾಸ್ಪದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ನವಜಾತ ಶಿಶುವಿನ ಶವ ಕಂಡುಬಂದಿದೆ. ಈ ದೃಶ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹುಲಸೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.&lt;/p&gt;&lt;p&gt;ಮೃತ ಶಿಶಿವಿನ ಹೊಕ್ಕಳ ಬಳ್ಳಿ ಇನ್ನೂ ಹಸಿಯಾಗಿಯೇ ಇತ್ತು. ಆಗಷ್ಟೇ ಹುಟ್ಟಿದ ಮಗುವನ್ನು ರಾತ್ರೋರಾತ್ರಿ ಚರಂಡಿಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಜನನದ ವಿಚಾರವನ್ನು ಮುಚ್ಚಿಡಲು ಈ ಅಮಾನವೀಯ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧದಲ್ಲಿ ಈ ಮಗು ಜನಿಸಿರಬಹುದೆಂಬ ಶಂಕೆ ಕೂಡ ಇದೆ.&lt;/p&gt;&lt;h2&gt;ಸಾರ್ವಜನಿಕರ ತೀವ್ರ ಆಕ್ರೋಶ&lt;/h2&gt;&lt;p&gt;ಈ ಘಟನೆ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಿದ್ದು, ಹೆತ್ತ ಮಗುವನ್ನೇ ತ್ಯಜಿಸಿರುವ ಪೋಷಕರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಜನಿಸಿದ ತಕ್ಷಣವೇ ಅದನ್ನು ತ್ಯಜಿಸಿ ಚರಂಡಿಗೆ ಎಸೆದಿರುವುದು ಮನುಕುಲವೇ ತಲೆತಗ್ಗಿಸುವ ಸಂಗತಿ. ಘಟನೆ ಸಂಬಂಧ ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವನ್ನು ಚರಂಡಿಗೆ ಎಸೆದವರು ಯಾರು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ, ಈ ದುರ್ಘಟನೆ ಸಮಾಜದಲ್ಲಿ ಮಾನವೀಯತೆ ಕುಗ್ಗುತ್ತಿರುವುದಕ್ಕೆ ಕನ್ನಡಿ ಹಿಡಿದಂತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳ ಅಗತ್ಯವಿದೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/newborn-baby-found-in-drain-at-bidar-shocking-incident-sparks-outrage-gdp/articleshow-fgzmd6h"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯಕ್ಕೆ ಬಸವಣ್ಣನ ತತ್ವವೇ ಪ್ರೇರಣೆ: ಸಚಿವ ಈಶ್ವರ್ ಖಂಡ್ರೆ]]></title>
            <link>https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx</link>
            <guid isPermaLink="true">https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx</guid>
            <pubDate>Wed, 22 Apr 2026 23:52:48 +0530</pubDate>
            <description><![CDATA[&lt;p&gt;ಬಸವಣ್ಣನವರು ಕಾಯಕವೇ ಕೈಲಾಸ ಎಂಬ ಸಂದೇಶದೊಂದಿಗೆ ದುಡಿಯಬೇಕು, ದುಡಿದು ಗಳಿಸಬೇಕು, ಗಳಿಸಿದ್ದನ್ನು ಉಳಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k9es3asmbdr2q8bxc24xnxzw,imgname-eshwar-khandre-1762506418996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಭಾಲ್ಕಿ (ಏ.22): &lt;/strong&gt;ಬಸವಣ್ಣನವರು ಕಾಯಕವೇ ಕೈಲಾಸ ಎಂಬ ಸಂದೇಶದೊಂದಿಗೆ ದುಡಿಯಬೇಕು, ದುಡಿದು ಗಳಿಸಬೇಕು, ಗಳಿಸಿದ್ದನ್ನು ಉಳಿಸಬೇಕು, ಉಳಿಸಿದ್ದನ್ನು ದಾಸೋಹದ ಮೂಲಕ ಸಮಾಜಕ್ಕೆ ಮರಳಿ ನೀಡಬೇಕು ಎಂದು ಸಾರಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಈ ದಾಸೋಹ ತತ್ವವೇ ಪ್ರೇರಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.&lt;/p&gt;&lt;p&gt;ಅವರು ಭಾಲ್ಕಿಯ ಹಿರೇಮಠ ಸಂಸ್ಥಾನದ ಆವರಣದಲ್ಲಿ ನಡೆಯುತ್ತಿರುವ ನಾಡೋಜ ಬಸವಲಿಂಗ ಪಟ್ಟದ್ದೇವರ ಅಮೃತಮಹೋತ್ಸವ ಹಾಗೂ ಲಿಂ. ಚನ್ನಬಸವ ಪಟ್ಟದ್ದೇವರ 27ನೇ ಸಂಸ್ಮರಣೋತ್ಸವದಲ್ಲಿ ಮಾತನಾಡಿ, ಇದಷ್ಟೇ ಅಲ್ಲ ಬಸವಾದಿ ಪ್ರಮಥರು ಅನುಭವಮಂಟಪದಲ್ಲಿ ಎಲ್ಲ, ಜಾತಿ ಜನಾಂಗದವರಿಗೂ ಸಮಾನ ಅವಕಾಶ ನೀಡಿದ್ದರು. ಇಲ್ಲಿ ಲಿಂಗತಾರತಮ್ಯವೂ ಇರಲಿಲ್ಲ, ಅಕ್ಕಮಹಾದೇವಿ, ಸತ್ಯಕ್ಕ, ಆಯ್ದಕ್ಕಿ ಲಕ್ಕಮ್ಮ, ನೀಲಾಂಬಿಕೆ, ಮುಕ್ತಾಯಕ್ಕ ಮೊದಲಾದವರು ತಮ್ಮ ವಿಚಾರಧಾರೆಗಳನ್ನು ಮುಂಡಿಸುತ್ತಿದ್ದರು. ಇದು ಮಹಿಳಾ ಸಬಲೀಕರಣದ ಸಂಕೇತವಾಗಿದ್ದು, ನಮ್ಮ ಸರ್ಕಾರ ಗೃಹಲಕ್ಷ್ಮೀ, ಶಕ್ತಿ ಯೋಜನೆಯ ಮೂಲಕ ಅದನ್ನೂ ಮುಂದುವರಿಸಿದೆ ಎಂದರು.&lt;/p&gt;&lt;p&gt;ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶತಾಯುಷಿ ಶ್ರೀ ಚನ್ನಬಸವ ಪಟ್ಟದ್ದೇವರ 27ನೇ ಸಂಸ್ಮರಣೋತ್ಸವ ನಡೆಸುತ್ತಿದ್ದೇವೆ. ಅವರು, ಕ್ರಾಂತಿ ಪುರುಷರು. ಅಸ್ಪೃಶ್ಯತೆಯ ಆಚರಣೆ ತೊಡೆದು ಹಾಕಲು ನಮ್ಮ ತಂದೆ ಲಿಂ.ಲೋಕನಾಯಕ ಡಾ.ಭೀಮಣ್ಣ ಖಂಡ್ರೆ ಅವರಿಗೆ ಬೆಂಬಲವಾಗಿ ನಿಂತು ಭಾಲ್ಕೇಶ್ವರ ದೇವಾಲಯಕ್ಕೆ ಅಶೋಕನಗರ ನಿವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು. ಇಂದು ನಾವು ಕಾಣುತ್ತಿರುವ ಶಿವಲಿಂಗದಾಕಾರದ ಅನುಭವ ಮಂಟಪದ ನಿರ್ಮಾಣದ ಶ್ರೇಯಸ್ಸು ಚನ್ನಬಸವಪಟ್ಟದ್ದೇವರಿಗೆ ಆಗಲೂ ತಲೆ ಮೇಲೆ ಇಟ್ಟಿಗೆ ಹೊತ್ತು ಕಟ್ಟಡ ನಿರ್ಮಿಸಿದ್ದು ಆದರ್ಶವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಉಪ ರಾಷ್ಟ್ರಪತಿಗಳು ಆಗಮಿಸಿರುವುದು ಯೋಗಾಯೋಗ&lt;/strong&gt;&lt;/h2&gt;&lt;p&gt;ನಿಜಾಮರ ಆಳ್ವಿಕೆಯ ಕಾಲದಲ್ಲಿ ಕನ್ನಡ ಕಲಿಸಲು ಅವಕಾಶ ಇರಲಿಲ್ಲ. ಆಗ ಹೊರಗೆ ಉರ್ದು ಫಲಕ ಹಾಕಿ ಒಳಗೆ ಕನ್ನಡ ಕಲಿಸಲು ಶ್ರಮಿಸಿದ ಪಟ್ಟದ್ದೇವರು, ಮಕ್ಕಳಿಗೆ ವಚನ ಸಾರ ತಿಳಿಯುವಂತೆ ಮಾಡಿದ್ದರು. ತಮ್ಮ ದೀಕ್ಷಾ ಗುರು ಚನ್ನಬಸವ ಪಟ್ಟದ್ದೇವರ ಶತಮಾನೋತ್ಸವವನ್ನು ಭೀಮಣ್ಣ ಖಂಡ್ರೆ ಅವರು ಅದ್ಧೂರಿಯಾಗಿ ನಡೆಸಿದ್ದರು, ಆಗ ಅಂದಿನ ರಾಷ್ಟ್ರಪತಿ ಡಾ.ಶಂಕರದಯಾಳ್ ಶರ್ಮಾ ಆಗಮಿಸಿದ್ದರು. ಇಂದಿನ ಪೀಠಾಧಿಪತಿಗಳ ಅಮೃತ ಮಹೋತ್ಸವಕ್ಕೆ ಉಪ ರಾಷ್ಟ್ರಪತಿಗಳು ಆಗಮಿಸಿರುವುದು ಯೋಗಾಯೋಗ ಎಂದು ಈಶ್ವರ ಖಂಡ್ರೆ ಹೇಳಿದರು.&lt;/p&gt;&lt;p&gt;ನಾಡೋಜ ಬಸವಲಿಂಗ ಪಟ್ಟದ್ದೇವರು, ಮಾಸಿಕ ಶರಣ ಸಂಗಮ, ಶಿವಾನುಭವ ಪ್ರವಚನ, ವಚನ ಗಾಯನದಂತಹ ಕಾರ್ಯಕ್ರಮಗಳ ಮೂಲಕ ಶರಣರ ವಚನಗಳ ಪ್ರಚಾರ ಪ್ರಸಾರ ಮಾಡುತ್ತಿದ್ದಾರೆ, ಸರಳ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಮೂಲಕ ಬಡವರು ಸಾಲದ ಸುಳಿಗೆ ಸಿಲುಕದಂತೆ ರಕ್ಷಿಸಿ ದ್ದಾರೆ. ಇವರ ಸಾಧನೆಗಳನ್ನು ಗುರುತಿಸಿ ಹಂಪಿ ವಿಶ್ವವಿದ್ಯಾಲಯ ಅವರಿಗೆ ನಾಡೋಜ ಗೌರವ ನೀಡಿದೆ. ಅವರು ನೂರ್ಕಾಲ ಬಾಳಲಿ ನಮಗೆ ಮಾರ್ಗದರ್ಶನ ನೀಡಲಿ ಎಂದರು.&lt;/p&gt;&lt;p&gt;ಭಾಲ್ಕಿಯ ಮಣ್ಣಿನ ಮಗನಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನದ ಫಲವಾಗಿ ಕಲ್ಯಾಣ ಕರ್ನಾಟಕಕ್ಕೆ 371 ಜೆ ಸಾಂವಿಧಾನಿಕ ತಿದ್ದುಪಡಿ ಯೊಂದಿಗೆ ವಿಶೇಷ ಸ್ಥಾನಮಾನ ದೊರಕಿದೆ. ಇಂದು ಅದು ಕಾಯ್ದೆಯಾಗಿದ್ದು ನಮ್ಮ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಯಾದ ಮಲ್ಲಿಕಾರ್ಜುನ ಖರ್ಗೆ ಅವರು, ತಮ್ಮ ಜೀವನದ ಉದ್ದಕ್ಕೂ ವಂಚಿತರಿಗೆ, ನೊಂದವರಿಗೆ ನ್ಯಾಯ ದೊರಕಿಸಲು ಹಾಗೂ ಸರ್ವರ ಸಮಾನತೆಗಾಗಿ ಶ್ರಮಿಸುತ್ತಿದ್ದಾರೆ, ಅವರು ಒಬ್ಬ ಮುತ್ಸದ್ದಿ ರಾಜಕಾರಣಿ ಎಂದು ಬಣ್ಣಿಸಿದರು.&lt;/p&gt;]]></content:encoded>
            <category>bidar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bhalki-basavanna-principles-annabhagya-eshwar-khandre-speech-gvd/articleshow-na49hqx"/>
        </item>
        <item>
            <title><![CDATA[ಬೀದರ್-ಬೆಂಗಳೂರು ವಿಮಾನ ಸೇವೆ ಶೀಘ್ರವೇ ಪುನರಾರಂಭ, ಮತ್ತೆ ಜಿಲ್ಲೆಯ ಜನತೆಗೆ ಸಂತಸದ ಸುದ್ದಿ]]></title>
            <link>https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7</guid>
            <pubDate>Sat, 16 May 2026 17:54:49 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಜೂನ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟವನ್ನು ಸರ್ಕಾರವೇ ಭರಿಸಲಿದ್ದು, ಈ ನಿರ್ಧಾರದಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಉತ್ತೇಜನ ಸಿಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krrbvjk4t29js5f256yxprrq,imgname-bidar-airport-1778934205028.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ : &lt;/strong&gt;ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಬೀದರ್ ಮತ್ತು ಬೆಂಗಳೂರು ನಡುವಿನ ನಾಗರಿಕ ವಿಮಾನಯಾನ ಸೇವೆ ಬರುವ ಜೂನ್ 1ರಿಂದ ಪುನರಾರಂಭಗೊಳ್ಳಲಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಜಿಲ್ಲಾ ಉಸ್ತುವಾರಿ ಮಂತ್ರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.&lt;/p&gt;&lt;p&gt;ಈ ಕುರಿತಂತೆ ಮಾತನಾಡಿ, ಕಳೆದ ಒಂದು ವರ್ಷದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅನುದಾನದ ಸಹಯೋಗದೊಂದಿಗೆ ಸ್ಟಾರ್ ಏರ್ ವಿಮಾನ ಸಂಸ್ಥೆಯು ಬೀದರ್-ಬೆಂಗಳೂರು ನಡುವೆ ಯಶಸ್ವಿಯಾಗಿ ಸೇವೆ ನೀಡುತ್ತಿತ್ತು. ಆದರೆ, ಮೇ 14ಕ್ಕೆ ಒಪ್ಪಂದದ ಅವಧಿ ಮುಕ್ತಾಯಗೊಂಡಿದ್ದರಿಂದ ವಿಮಾನಯಾನ ಸಂಸ್ಥೆಯು ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.&lt;/p&gt;&lt;h2&gt;ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟ ಸರ್ಕಾರದ ವತಿಯಿಂದಲೇ ಭರಿಸುವ ನಿರ್ಧಾರ&lt;/h2&gt;&lt;p&gt;ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮನವೊಲಿಸಲಾಗಿದೆ. ವಿಮಾನಯಾನ ಸಂಸ್ಥೆಗೆ ಆಗುವ ಆರ್ಥಿಕ ನಷ್ಟದ ಪಾಲನ್ನು (Viability Gap Funding) ಸರ್ಕಾರದ ವತಿಯಿಂದಲೇ ಭರಿಸುವ ಮೂಲಕ ಸೇವೆಯನ್ನು ಮತ್ತೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.&lt;/p&gt;&lt;p&gt;ಜೂನ್ 1ರಿಂದ ಬೀದರ್-ಬೆಂಗಳೂರು ಹಾಗೂ ಬೆಂಗಳೂರು-ಬೀದರ್ ಮಧ್ಯೆ ಪ್ರತಿದಿನ ವಿಮಾನಯಾನ ಸೇವೆ ಲಭ್ಯವಿರಲಿದ್ದು, ಇದರಿಂದ ಜಿಲ್ಲೆಯ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ನಾಗರಿಕರಿಗೆ ಅನುಕೂಲವಾಗಲಿದೆ. ಈ ಭಾಗದ ಪ್ರವಾಸೋದ್ಯಮ ಮತ್ತು ವ್ಯಾಪಾರೋದ್ಯಮದ ವೃದ್ಧಿಗೂ ಇದು ಮತ್ತಷ್ಟು ವೇಗ ನೀಡಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಬೀದರ್ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿ, ವಿಮಾನಯಾನ ಪುನರಾರಂಭಕ್ಕೆ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.&lt;/p&gt;&lt;h2&gt;KKRDB ಅಧ್ಯಕ್ಷ ಅಜಯ್ ಸಿಂಗ್ ಕೂಡ ಸ್ಪಷ್ಟನೆ&lt;/h2&gt;&lt;p&gt;ಇನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ ಅಜಯ್ ಸಿಂಗ್ ಅವರು ಕೂಡ ಬೀದರ್&ndash;ಬೆಂಗಳೂರು ನಾಗರಿಕ ವಿಮಾನ ಸೇವೆ ಒಂದು ತಿಂಗಳೊಳಗೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-to-resume-from-june-1announces-minister-eshwar-khandre-gdp/articleshow-o2gb9s7"/>
        </item>
        <item>
            <title><![CDATA[ಬೀದರ್‌ನಲ್ಲೂ ಕೋಟಿ ಬೆಲೆಯ ‘ಎರಡು ತಲೆ ಹಾವು’ ರಕ್ಷಣೆ: ಅರಣ್ಯ ಇಲಾಖೆಯಿಂದ ಮೂವರು ಸ್ಮಗ್ಲರ್‌ಗಳ ಬಂಧನ!]]></title>
            <link>https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky</link>
            <guid isPermaLink="true">https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky</guid>
            <pubDate>Thu, 14 May 2026 15:08:28 +0530</pubDate>
            <description><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ 'ಎರಡು ತಲೆ ಹಾವು' (ರೆಡ್ ಸ್ಯಾಂಡ್ ಬೋವಾ) ಅನ್ನು ರಕ್ಷಿಸಿದೆ. ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krjw38a4cgne6246qdd1d8q0,imgname-bidar-red-sand-boa-snake-rescue-1778749907268.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ 'ಎರಡು ತಲೆ ಹಾವು' (ರೆಡ್ ಸ್ಯಾಂಡ್ ಬೋವಾ) ಅನ್ನು ರಕ್ಷಿಸಿದೆ. ಆಂಧ್ರಪ್ರದೇಶ ನೋಂದಣಿಯ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;&lt;img&gt;&lt;p&gt;&lt;strong&gt;ಬೀದರ್:&lt;/strong&gt; ಗಡಿ ಜಿಲ್ಲೆ ಬೀದರ್&zwnj;ನಲ್ಲಿ ವನ್ಯಜೀವಿಗಳ ಅಕ್ರಮ ಸಾಗಾಟದ ದೊಡ್ಡ ಜಾಲವೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆಬಾಳುವ &lsquo;ಎರಡು ತಲೆ ಹಾವು&rsquo; ಅಥವಾ &lsquo;ಮಣ್ಣ ಮುಕ್ಕ ಹಾವು&rsquo; (Red Sand Boa) ಎಂದು ಕರೆಯಲ್ಪಡುವ ಅಪರೂಪದ ಹಾವನ್ನು ರಕ್ಷಿಸಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.&lt;/p&gt;&lt;img&gt;&lt;p&gt;ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ಆಶಿಶ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯ ತಂಡವು ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಆಂಧ್ರಪ್ರದೇಶ ನೋಂದಣಿ (AP Registration) ಹೊಂದಿದ್ದ ಬಿಳಿ ಬಣ್ಣದ ಕಾರಿನಲ್ಲಿ ಹಾವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.&lt;/p&gt;&lt;img&gt;&lt;p&gt;ವಶಪಡಿಸಿಕೊಳ್ಳಲಾದ ರೆಡ್ ಸ್ಯಾಂಡ್ ಬೋವಾ ಹಾವು ಸುಮಾರು 5.34 ಕೆಜಿ ತೂಕವಿದ್ದು, ಇದು ಅತ್ಯಂತ ದೊಡ್ಡ ಗಾತ್ರದ ಹಾವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಹಾವಿಗೆ ಕೋಟ್ಯಾಂತರ ರೂಪಾಯಿ ಬೆಲೆ ಇದೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಮಾಟ-ಮಂತ್ರ, ವಾಮಾಚಾರ ಹಾಗೂ ಔಷಧೀಯ ಗುಣಗಳಿವೆಯೆಂಬ ಮೂಢನಂಬಿಕೆಯಿಂದಾಗಿ ಇಂತಹ ಹಾವುಗಳ ಅಕ್ರಮ ಸಾಗಾಟ ಮತ್ತು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಹಾವು ಸಾಗಿಸುತ್ತಿದ್ದ ಕಾರನ್ನು ಜಪ್ತಿ ಮಾಡಿರುವ ಅಧಿಕಾರಿಗಳು, ಕಾರಿನಲ್ಲಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಹಾವನ್ನು ಎಲ್ಲಿಂದ ತಂದಿದ್ದರು ಮತ್ತು ಯಾರಿಗೆ ಮಾರಾಟ ಮಾಡಲು ಹೊರಟಿದ್ದರು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;img&gt;&lt;p&gt;ಎರಡು ತಲೆ ಹಾವು ಅಥವಾ ಮಣ್ಣ ಮುಕ್ಕ ಹಾವುಗಳನ್ನು ಮನೆಯಲ್ಲಿಟ್ಟರೆ ಅಥವಾ ಪೂಜೆ ಮಾಡಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ತಪ್ಪು ಕಲ್ಪನೆ ಜನರಲ್ಲಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಸ್ಮಗ್ಲರ್&zwnj;ಗಳು ಕಾಡಿನಿಂದ ಇವುಗಳನ್ನು ಹಿಡಿದು ಕೋಟಿಗಟ್ಟಲೆ ಹಣಕ್ಕೆ ಮಾರಾಟ ಮಾಡುತ್ತಾರೆ. ಆದರೆ ವನ್ಯಜೀವಿಗಳನ್ನು ಹಿಡಿಯುವುದು ಮತ್ತು ಮಾರಾಟ ಮಾಡುವುದು ಕಾನೂನುಬಾಹಿರ ಹಾಗೂ ಕಠಿಣ ಶಿಕ್ಷಾರ್ಹ ಅಪರಾಧವಾಗಿದೆ.&amp;nbsp;&lt;/p&gt;&lt;p&gt;ಬೀದರ್ ಅರಣ್ಯ ಇಲಾಖೆಯ ಈ ಸಮಯೋಚಿತ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದ್ದು, ವನ್ಯಜೀವಿಗಳ ರಕ್ಷಣೆಗೆ ಇಲಾಖೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರಿನಲ್ಲಿಯೂ 2 ತಲೆ ಹಾವನ್ನ ಮಾರಾಟ ಮಾಡಲು ಯತ್ನಿಸಿದಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧನ ಮಾಡಿದ್ದರು. 1 ಕೆಜಿ 400 ಗ್ರಾಂ ತೂಕದ ಬೃಹತ್ 2 ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಂದ ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಸೀಜ್ ಮಾಡಿದ್ದರು. ಇಬ್ಬರು ಆಂಧ್ರ, ಇಬ್ಬರು ತುಮಕೂರು, ಓರ್ವ ಶಿವಮೊಗ್ಗ ಮೂಲದವರ ಬಂಧನ ಮಾಡಿ, ಕೋಟ್ಯಾಂತರ ರೂಪಾಯಿಗೆ ಬೆಲೆ ಬಾಳುವ ಎರಡು ತಲೆ (ಮಣ್ಣುಮುಕ್ಕ) ಹಾವು ರಕ್ಷಣೆ ಮಾಡಲಾಗಿತ್ತು.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/bidar-two-headed-snake-or-red-sand-boa-snake-rescue-smuggling-arrest-dfo-ashish-reddy-sat-slzzgky"/>
        </item>
        <item>
            <title><![CDATA[Bidar: ಬಿಸಿಲಾಘಾತಕ್ಕೆ ಕುಸಿದು ಸಾವನ್ನಪ್ಪಿದ 20 ವರ್ಷದ ಯುವಕ; ರಸ್ತೆಬದಿ  ಪತ್ತೆಯಾದ ಶವ]]></title>
            <link>https://kannada.asianetnews.com/gallery/karnataka-districts/bidar-20-year-old-man-dies-after-collapsing-on-the-side-of-the-road-due-to-heatstroke-in-kamalanagar-mrq-tmx22er</link>
            <guid isPermaLink="true">https://kannada.asianetnews.com/gallery/karnataka-districts/bidar-20-year-old-man-dies-after-collapsing-on-the-side-of-the-road-due-to-heatstroke-in-kamalanagar-mrq-tmx22er</guid>
            <pubDate>Mon, 20 Apr 2026 11:49:18 +0530</pubDate>
            <description><![CDATA[ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpmr78bwm94jztjdvsjqr57p,imgname-bidar-death--5--1776665469308.jpg" type="image/jpeg" height="390" width="690"/>
            <content:encoded><![CDATA[ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.&lt;img&gt;&lt;p&gt;ಏಪ್ರಿಲ್ 14ರಂದು 20 ವರ್ಷದ ಯುವಕನೋರ್ವ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದು, ಆತನ ಸಾವಿಗೆ ಅತಿಯಾದ ಬಿಸಿಲು ಕಾರಣ ಎಂದು ಹೇಳಲಾಗುತ್ತಿದೆ. ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50 ಬಳಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು.&lt;/p&gt;&lt;img&gt;&lt;p&gt;ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಎಂದು ಗುರುತಿಸಲಾಗಿದೆ. ಕಳೆದ ಹಲವು ತಿಂಗಳಿಂದ ಮೃತ ಸಮೀರ್ ಕಮಲನಗರ ಪಟ್ಟಣದ ಕಟಿಂಗ್ ಶಾಪ್&zwnj;ನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಿಸಿಲಿನ ತಾಪ ತಾಳಲಾರದೇ ತಲೆ ಸುತ್ತು ಬಿದ್ದು ಸಮೀರ್ ಮೃತನಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.&lt;/p&gt;&lt;img&gt;&lt;p&gt;ಏಪ್ರಿಲ್ 14ರಂದು ಬೆಳ್ಳಗ್ಗೆ 10 ಗಂಟೆಗೆ ತರಕಾರಿ ತೆಗೆದುಕೊಂಡು ಬರಲು ಸಮೀರ್ ರೂಮ್&zwnj;ನಿಂದ ಹೊರ ಬಂದಿದ್ದಾನೆ. ತರಕಾರಿ ಖರೀದಿಸಿ ಹಿಂದಿರುಗುವಾಗ ಬಿಸಿಲಿನ ಪ್ರಮಾಣ ಏರಿಕೆಯಾಗಿತ್ತು. ಈ ವೇಳೆ ರಸ್ತೆ ಬದಿಯ ಮೆಕಾನಿಕ್ ಅಂಗಡಿಯಲ್ಲಿ ನೀರು ಕುಡಿದು ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದ್ದಿದ್ದನು. ಸ್ವಲ್ಪ ಚೇತರಿಸಿಕೊಂಡ ನಂತರ ಸಮೀರ್ ಡಿಗ್ಗಿ ಗ್ರಾಮಕ್ಕೆ ಹೊರಟಿದ್ದನು.&lt;/p&gt;&lt;img&gt;&lt;p&gt;ಮಾರ್ಗಮಧ್ಯೆಯೇ ಸಮೀರ್ ತಲೆಸುತ್ತು ಬಂದು ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಮಾಹಿತಿ ನೀಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ ಮತ್ತು ಪಿಎಸ್ಐ ಆಶಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮೀರ್ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಮಹಾದುರಂತ; ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು&lt;/strong&gt;&lt;/p&gt;&lt;img&gt;&lt;p&gt;ಈ ವರ್ಷ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ತನ್ನ ಪ್ರಖರತೆ ಹೆಚ್ಚಿಸುತ್ತಾ ಸಾಗಿದ್ದು, ಜನರು ಮನೆಯಿಂದ ಹೊರಗಡೆ ಬರಲು ಭಯಪಡುವಂತಾಗಿದೆ. ಅನಿವಾರ್ಯವಾಗಿ ಹೊರ ಬರುವ ಜನರು ಛತ್ರಿ ಬಳಕೆ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕಳೆದ ಕೆಲವು ದಿನಗಳಿಂದ ಬೀದರ್ ಜಿಲ್ಲೆಯಲ್ಲಿ 35 ರಿಂದ 38 ಡಿಗ್ರಿ ಸೆಲ್ಸಿಯಸ್&zwnj; ವರೆಗೂ ತಾಪಮಾನ ದಾಖಲಾಗುತ್ತಿದೆ. ಬೇಸಿಗೆಯ ಹೊಡೆತಕ್ಕೆ ಈಗಾಗಲೇ ಕೃಷಿಹೊಂಡ, ಹಳ್ಳ, ಕೊಳ್ಳಗಳು ಬತ್ತಿ ಹೋಗುತ್ತಿದ್ದು, ಜಾನುವಾರುಗಳು ಸಹ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; Mysuru: ವೀಕೆಂಡ್ ಪಾರ್ಟಿಯಲ್ಲಿ ಗಲಾಟೆ; ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಟೆಕ್ಕಿ&lt;/strong&gt;&lt;/p&gt;]]></content:encoded>
            <category>bidar</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/bidar-20-year-old-man-dies-after-collapsing-on-the-side-of-the-road-due-to-heatstroke-in-kamalanagar-mrq-tmx22er"/>
        </item>
        <item>
            <title><![CDATA[40th State Journalists Conference: ಏ.11, 12ರಂದು ಬೀದರ್‌ಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ]]></title>
            <link>https://kannada.asianetnews.com/state/40th-state-journalists-conference-in-bidar-on-the-11th-and-12th-april-2026-rav/articleshow-uvd3ia2</link>
            <guid isPermaLink="true">https://kannada.asianetnews.com/state/40th-state-journalists-conference-in-bidar-on-the-11th-and-12th-april-2026-rav/articleshow-uvd3ia2</guid>
            <pubDate>Fri, 10 Apr 2026 14:01:53 +0530</pubDate>
            <description><![CDATA[&lt;p&gt;ಬೀದರ್&zwnj;ನಲ್ಲಿ ಏಪ್ರಿಲ್ 11 ಮತ್ತು 12 ರಂದು 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knv89d5rj4tdn86599tb1xvs,imgname-----------------------2026-04-10t140118.684-1775809901752.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಏ.10): &lt;/strong&gt;ಬೀದರ್&zwnj;ನಲ್ಲಿ ಏ.11 ಮತ್ತು 12 ರಂದು 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಗುರುವಾರ ಬೆಂಗಳೂರು ಪ್ರೆಸ್&zwnj;ಕ್ಲಬ್&zwnj;ನಲ್ಲಿ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.&lt;/p&gt;&lt;p&gt;ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಝೀರಾ ಕನ್ವೆನ್ಷನ್ ಹಾಲ್&zwnj;ನಲ್ಲಿ ಡಾ. ಭೀಮಣ್ಣ ಖಂಡ್ರೆ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಸಮ್ಮೇಳನವನ್ನು 11ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ ಎಂದರು.&lt;/p&gt;&lt;p&gt;ಅರಣ್ಯ, ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಪೌರಾಡಳಿತ ಸಚಿವ ರಹೀಂಖಾನ್ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ ವ್ಯಂಗ್ಯಚಿತ್ರ ಪ್ರದರ್ಶನ ಅನಾವರಣಗೊಳಿಸುವರು.&lt;/p&gt;&lt;h2&gt;12ಂದು ಸಮಾರೋಪ:&lt;/h2&gt;&lt;p&gt;ಏ.12 ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಮಾರೋಪ ಭಾಷಣ ಮಾಡಲಿದ್ದು, ಸ್ಪೀಕರ್ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿರುವರು. ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿನಂದನಾ ನುಡಿ ನೆರವೇರಿಸಲಿದ್ದು, ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣ ಪಾಟೀಲ್, ಬೋಸರಾಜು ಪಾಲ್ಗೊಳ್ಳಲಿದ್ದಾರೆ. ಕಲ್ಯಾಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜೇಯ ಸಿಂಗ್ ಉಪಸ್ಥಿತರಿರುವರು ಎಂದು ತಿಳಿಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರಗಾಂಧಿ, ಪ್ರಧಾನ ಕಾರ್ಯದರ್ಶಿ ಜಯಕುಮಾರಗೌಡ, ರಾಜ್ಯ ಸಮಿತಿ ಸದಸ್ಯ ಎಚ್.ಆರ್.ರವೀಶ್, ಉಪಾಧ್ಯಕ್ಷ ಡಾ.ಸ್ವಾಮಿ, ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಜುಕ್ರಿಯಾ ಮತ್ತಿತರರು ಇದ್ದರು.&lt;/p&gt;]]></content:encoded>
            <category>bidar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/40th-state-journalists-conference-in-bidar-on-the-11th-and-12th-april-2026-rav/articleshow-uvd3ia2"/>
        </item>
        <item>
            <title><![CDATA[ಬೀದರ್‌ನ ಬಾನಿಗೆ ಮರಳಿದ ಲೋಹದ ಹಕ್ಕಿ! ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್]]></title>
            <link>https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</link>
            <guid isPermaLink="true">https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1</guid>
            <pubDate>Fri, 01 May 2026 16:39:34 +0530</pubDate>
            <description><![CDATA[ಸ್ಥಗಿತಗೊಂಡಿದ್ದ ಬೀದರ್&zwnj;-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಈ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಅನುದಾನ ಒದಗಿಸಲಾಗುತ್ತಿದ್ದು, ಇದು ಜಿಲ್ಲೆಯ ಸಂಪರ್ಕ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqhkkstz3m20dc86284nr8mz,imgname-star-air-bidar-flights--1--1777633716063.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೀದರ್&zwnj; ಜಿಲ್ಲೆಗೆ ಮಹತ್ವದ ಬೆಳವಣಿಗೆಯಾಗಿ, ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮತ್ತೆ ಆರಂಭಗೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಬೀದರ್&zwnj;&ndash;ಬೆಂಗಳೂರು ನಡುವೆ ಕಾರ್ಯನಿರ್ವಹಿಸುತ್ತಿದ್ದ ವಿಮಾನ ಸೇವೆ ಪುನರಾರಂಭವಾಗಲಿದ್ದು, ಟರ್ಮಿನಲ್ ಕಾರ್ಯಾಚರಣೆಗಳು ಮತ್ತೆ ಚೇತರಿಸಿಕೊಳ್ಳಲು ದಾರಿ ಸುಗಮವಾಗಿದೆ.&lt;/p&gt;&lt;p&gt;ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಸಂಬಂಧ ಮನವಿ ಸಲ್ಲಿಸಿದ್ದರು. ಅವರ ಪ್ರಸ್ತಾವನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರು, ಬೀದರ್&zwnj;ನ ನಾಗರಿಕ ವಿಮಾನಯಾನ ಸೇವೆಗೆ ಅಗತ್ಯ ಅನುದಾನ ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.&lt;/p&gt;&lt;h2&gt;ವಿಮಾನಯಾನ ಸಂಸ್ಥೆ ಎದುರಿಸುವ ನಷ್ಟವನ್ನು ಭರಿಸಲು VGF ವ್ಯವಸ್ಥೆಯಡಿ ಅನುದಾನ&lt;/h2&gt;&lt;p&gt;ಈ ನಿರ್ಧಾರದ ಭಾಗವಾಗಿ, ವಿಮಾನಯಾನ ಸಂಸ್ಥೆಗಳು ಎದುರಿಸುವ ನಷ್ಟವನ್ನು ಭರಿಸಲು Viability Gap Funding (VGF) ವ್ಯವಸ್ಥೆಯಡಿ ಅನುದಾನ ನೀಡಲಾಗುತ್ತದೆ. ಈ ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ಭರಿಸಲಾಗುವುದು. ಇದರಿಂದ ವಿಮಾನ ಸೇವೆ ನಿರಂತರವಾಗಿ ಕಾರ್ಯನಿರ್ವಹಿಸಲು ಸಹಾಯವಾಗಲಿದ್ದು, ಜಿಲ್ಲೆಯ ಸಂಪರ್ಕ ವ್ಯವಸ್ಥೆಗೆ ಮಹತ್ವದ ಉತ್ತೇಜನ ದೊರೆಯಲಿದೆ.&lt;/p&gt;&lt;p&gt;ಇತ್ತೀಚೆಗೆ, ನಾಗರಿಕ ವಿಮಾನಯಾನ ಸೇವೆಯನ್ನು ನಿರ್ವಹಿಸುತ್ತಿದ್ದ ಸ್ಟಾರ್ ಏರ್ ಸಂಸ್ಥೆಯು ಸರ್ಕಾರದೊಂದಿಗೆ ಮಾಡಿಕೊಂಡಿದ್ದ ಒಪ್ಪಂದದ ಅವಧಿ ಮುಗಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಕಳೆದ ವರ್ಷ ಸರ್ಕಾರವು ಕೆಕೆಆರ್&zwnj;ಡಿಬಿ ನಿಧಿಯಿಂದ ಸುಮಾರು 13 ಕೋಟಿ ರೂಪಾಯಿ ಅನುದಾನವನ್ನು ನೀಡಿತ್ತು. ಇದೀಗ ಹೊಸ ಅವಧಿಗೆ ಸ್ಟಾರ್ ಏರ್ ಸಂಸ್ಥೆಯು 20 ಕೋಟಿ ರೂಪಾಯಿಗಿಂತ ಹೆಚ್ಚು ಅನುದಾನ ಬೇಡಿಕೆ ಇಟ್ಟಿದ್ದುದಾಗಿ ಮೂಲಗಳು ತಿಳಿಸಿವೆ.&lt;/p&gt;&lt;p&gt;ಸಚಿವ ಈಶ್ವರ ಖಂಡ್ರೆ ಅವರ ಸತತ ಪ್ರಯತ್ನದ ಫಲವಾಗಿ ಸರ್ಕಾರ ಮತ್ತೆ ಅನುದಾನ ನೀಡಲು ಸಮ್ಮತಿಸಿರುವುದರಿಂದ, ಬೀದರ್&zwnj;ನಲ್ಲಿ ವಿಮಾನ ಸೇವೆ ಪುನರಾರಂಭವಾಗುವುದು ಖಚಿತವಾಗಿದೆ. ಈ ಕ್ರಮದಿಂದ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಕೈಗಾರಿಕಾ ವಲಯಗಳಿಗೆ ಮಹತ್ತರ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.&lt;/p&gt;&lt;h2&gt;ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಅನುಕೂಲ&lt;/h2&gt;&lt;p&gt;ಇದರಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೂ ಸಹ ಹೆಚ್ಚಿನ ಅನುಕೂಲ ಸಿಗಲಿದೆ, ಏಕೆಂದರೆ ಅವರು ಕೂಡ ಬೀದರ್ ವಿಮಾನ ನಿಲ್ದಾಣವನ್ನು ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಒಟ್ಟಿನಲ್ಲಿ, ಈ ನಿರ್ಧಾರ ಉತ್ತರ ಕರ್ನಾಟಕ ಭಾಗದ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.&lt;/p&gt;&lt;p&gt;ಬೀದರ್&zwnj; &ndash; ಬೆಂಗಳೂರು ನಡುವೆ ಮತ್ತೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗಲಿದ್ದು, ಸರ್ಕಾರಕ್ಕೆ ಹಾಗೂ ಕೆಕೆಆರ್&zwnj;ಡಿಬಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಹಾಗೂ ಬೀದರ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ.&lt;/p&gt;&lt;p&gt;- ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ&lt;/p&gt;]]></content:encoded>
            <category>bidar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bidar-bengaluru-flight-services-set-to-resume-as-karnataka-govt-approves-funding-support-gdp/articleshow-v6ud2x1"/>
        </item>
        <item>
            <title><![CDATA[ಮನೆ ಮ್ಯೂಟೇಷನ್‌ಗೆ ₹5 ಲಕ್ಷ ಲಂಚ; 2.5 ಲಕ್ಷ ಹಣದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!]]></title>
            <link>https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr</link>
            <guid isPermaLink="true">https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr</guid>
            <pubDate>Tue, 05 May 2026 20:13:15 +0530</pubDate>
            <description><![CDATA[&lt;p&gt;ಬೀದರ್&zwnj;ನಲ್ಲಿ ಮನೆ ಮ್ಯೂಟೇಷನ್ ಮಾಡಿಕೊಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮರಗುಂದಾ ಗ್ರಾಮದ ಡಾಬಾದಲ್ಲಿ ಮೊದಲ ಕಂತು ₹2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿ ಶಿವಕುಮಾರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqw93fhg6xsat79dw0tmhkny,imgname-bidar-lokayukta-trap-1777991794224.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೀದರ್ (ಮೇ 05): ಭ್ರ&lt;/strong&gt;ಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬೀದರ್&zwnj;ನಲ್ಲಿ ಮನೆಯ ಮ್ಯೂಟೇಷನ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 2.5 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಈ ದಾಳಿ ನಡೆದಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಬೀದರ್ ತಾಲೂಕಿನ ಮರಗುಂದಾ ಗ್ರಾಮದ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ. ಮರಕುಂದಾ ಗ್ರಾಮದ ನಿವಾಸಿ ಮಹಾದೇವ್ ಶಾಂತಪ್ಪ ಎಂಬುವವರು ತಮ್ಮ ಮನೆಯ ಮ್ಯೂಟೇಷನ್ (ಖಾತಾ ಬದಲಾವಣೆ) ಮಾಡಿಕೊಡುವಂತೆ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರ ಬಳಿ ಮನವಿ ಮಾಡಿದ್ದರು. ಆದರೆ, ಈ ಕೆಲಸ ಮಾಡಿಕೊಡಲು ಶಿವಕುಮಾರ್ ಬರೋಬ್ಬರಿ 5 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು.&lt;/p&gt;&lt;h2&gt;&lt;strong&gt;ದಾಬಾದಲ್ಲಿ ನಡೆದ ಲಂಚದ ಡೀಲ್:&lt;/strong&gt;&lt;/h2&gt;&lt;p&gt;ಲಂಚದ ಹಣ ನೀಡಲು ಇಚ್ಛಿಸದ ಮಹಾದೇವ್ ಅವರು ಬೀದರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಯೋಜನೆಯಂತೆ, ಮರಕುಂದಾ ಗ್ರಾಮದ ಹೊರವಲಯದಲ್ಲಿರುವ ದಾಬಾವೊಂದರಲ್ಲಿ ಲಂಚದ ಹಣದ ಮೊದಲ ಕಂತು 2.5 ಲಕ್ಷ ರೂಪಾಯಿಯನ್ನು ನೀಡಲು ನಿರ್ಧರಿಸಲಾಗಿತ್ತು. ಹಣವನ್ನು ಸ್ವೀಕರಿಸಲು ಶಿವಕುಮಾರ್ ತನ್ನ ಸಹಚರ ಶರಣಯ್ಯ ಎಂಬಾತನೊಂದಿಗೆ ಆಗಮಿಸಿದ್ದನು.&lt;/p&gt;&lt;h2&gt;&lt;strong&gt;ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ:&lt;/strong&gt;&lt;/h2&gt;&lt;p&gt;ಮಹಾದೇವ್ ಅವರಿಂದ 2.5 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ, ಸುತ್ತುವರಿದಿದ್ದ ಲೋಕಾಯುಕ್ತ ಅಧಿಕಾರಿಗಳು ಶಿವಕುಮಾರ್ ಮತ್ತು ಆತನ ಸಹಚರ ಶರಣಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಬೀದರ್ ಲೋಕಾಯುಕ್ತ ಡಿಎಸ್&zwnj;ಪಿ ಹಣಮಂತರಾಯ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರ ಆಕ್ರೋಶ:&lt;/strong&gt;&lt;/h3&gt;&lt;p&gt;ಸಣ್ಣ ಕೆಲಸಗಳಿಗೂ ಸಾವಿರಾರು ರೂಪಾಯಿ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಮನೆ ಮ್ಯೂಟೇಷನ್ ಮಾಡಲು 5 ಲಕ್ಷ ರೂಪಾಯಿ ಬೇಡಿಕೆಯಿಟ್ಟ ಗ್ರಾಮ ಲೆಕ್ಕಾಧಿಕಾರಿಯ ಧಾರ್ಷ್ಟ್ಯ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಸದ್ಯ ಬಂಧಿತರಿಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಬೀದರ್ ಲೋಕಾಯುಕ್ತ ಪೊಲೀಸರ ಈ ಕಾರ್ಯಾಚರಣೆಯು ಭ್ರಷ್ಟ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದ್ದು, ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ಪ್ರೇರಣೆಯಾಗಿದೆ.&lt;/p&gt;]]></content:encoded>
            <category>bidar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/bidar-village-accountant-trapped-by-lokayukta-while-taking-bribe-for-mutation-sat/articleshow-vi4fsrr"/>
        </item>
        <item>
            <title><![CDATA[ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ]]></title>
            <link>https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf</link>
            <guid isPermaLink="true">https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf</guid>
            <pubDate>Fri, 17 Apr 2026 17:42:32 +0530</pubDate>
            <description><![CDATA[&lt;p&gt;ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್&zwnj;ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdn7wjmvgmmraeh9tq69550,imgname-ration-lorry-overturn--4--1776427463252.jpg" type="image/jpeg" height="390" width="690"/>
            <content:encoded><![CDATA[&lt;p&gt;ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್&zwnj;ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.&lt;/p&gt;&lt;img&gt;&lt;p&gt;ಬೀದರ್: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಈ ಲಾರಿ ಹೋಗುತ್ತಿತ್ತು.&lt;/p&gt;&lt;img&gt;&lt;p&gt;ಬೀದರ್ ನಗರದ ಝರಣಿ ನರಸಿಂಹ ದೇವಸ್ಥಾನದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ನೂರು ಟನ್&zwnj;ಗೂ ಅಧಿಕ&zwnj; ಪಡಿತರ ಅಕ್ಕಿ ಇರೋ ಬಗ್ಗೆ ಮಾಹಿತಿ ಇದೆ.&lt;/p&gt;&lt;img&gt;&lt;p&gt;ಕಾರು ಹಾಗೂ ಟಾಟಾ ಮ್ಯಾಜಿಕ್&zwnj;ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಅಕ್ಕಿ ತುಂಬಿದ ಈ ಟ್ರಕ್ ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಬೀದರ್&zwnj;ನ ರಿಂಗ್ ರೋಡ್&zwnj; ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.&lt;/p&gt;&lt;img&gt;&lt;p&gt;ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಭಾಗ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದಿರಬಹುದು ಎಂಬ ಶಂಕೆ ಮೂಡಿದ್ದು, ಅಪಘಾತದ ನಂತರ ಲಾರಿ ಮಗುಚಿ ಬಿದ್ದಿದ್ದರಿಂದ ರಸ್ತೆ ತುಂಬಾ ಅಕ್ಕಿ ಚೆಲ್ಲಿದೆ.&lt;/p&gt;]]></content:encoded>
            <category>bidar</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/lorry-carrying-illegal-ration-rice-overturns-tons-of-rice-fall-onto-the-road-xhaxfaf"/>
        </item>
    </channel>
</rss>
