<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 28 Apr 2026 00:25:10 +0530</lastBuildDate>
        <atom:link href="https://kannada.asianetnews.com/rss/chamarajnagar" rel="self" type="application/rss+xml"/>
        <item>
            <title><![CDATA[ಸಂಕಷ್ಟದಿಂದ ಆಶಾಕಿರಣದತ್ತ, ಚಾಮರಾಜನಗರದ ಅಜ್ಜಿ ಕೈ ಹಿಡಿದ ಸಮಾಜ: ಮಕ್ಕಳಿಗೆ ಮನೆ-ಧನಸಹಾಯ ಭರವಸೆ]]></title>
            <link>https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826</link>
            <guid isPermaLink="true">https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826</guid>
            <pubDate>Sun, 26 Apr 2026 18:50:19 +0530</pubDate>
            <description><![CDATA[&lt;p&gt;ಅನಾಥ ಮಕ್ಕಳ ಪಾಲನೆ ಪೋಷಣೆ ಮಾಡುತ್ತಿರುವ ಅಜ್ಜಿಗೆ ಒಂದು ಮನೆ, ಅಗತ್ಯ ಧನಸಹಾಯ ಮಕ್ಕಳಿಗೆ ಆಧಾರ್ ಕಾರ್ಡ್ ಪಡಿತರ ಚೀಟಿ ಮಾಡಿಸಿಕೊಡುವ ಭರವಸೆ ಸಿಕ್ಕಿದ್ದು ಈ ಮಕ್ಕಳ ಭವಿಷದಲ್ಲಿ ಆಶಾಕಿರಣ ಮೂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq4z4ed0stxn3qfghq63hqvp,imgname-knk-1777209588128.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು.ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.26): &lt;/strong&gt;ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ್ದ ಅನಾಥ ಮಕ್ಕಳ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ಇಬ್ಬರು ಅನಾಥ ಮಕ್ಕಳ ಪಾಲನೆ ಪೋಷಣೆ ಮಾಡುತ್ತಿರುವ ಅಜ್ಜಿಗೆ ಒಂದು ಮನೆ, ಅಗತ್ಯ ಧನಸಹಾಯ ಮಕ್ಕಳಿಗೆ ಆಧಾರ್ ಕಾರ್ಡ್ ಪಡಿತರ ಚೀಟಿ ಮಾಡಿಸಿಕೊಡುವ ಭರವಸೆ ಸಿಕ್ಕಿದ್ದು ಈ ಮಕ್ಕಳ ಭವಿಷದಲ್ಲಿ ಆಶಾಕಿರಣ ಮೂಡಿದೆ. ಚಾಮರಾಜನಗರ ತಾಲೂಕಿನ ಮೂಡಲ ಅಗ್ರಹಾರದ ಮಹದೇವ ಕುಡಿತದ ದಾಸನಾಗಿದ್ದ. ಎರಡು ತಿಂಗಳ ಹಿಂದೆ ಕುಡಿದ ಅಮಲಿನಲ್ಲಿ ತನ್ನ ಪತ್ನಿ ಸುಮತಿಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದ.&lt;/p&gt;&lt;p&gt;ಸುಟ್ಟಗಾಯಗಳಿಂದ ಸುಮತಿ ಮೃತಪಟ್ಟಿದ್ದಳು. ಪತಿ ಜೈಲು ಸೇರಿದ್ದು ಈ ದಂಪತಿಗೆ ಇದ್ದ 6 ವರ್ಷ ಹಾಗು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದೀಗ ತಂದೆ ತಾಯಿ ಇಲ್ಲದೆ ತಬ್ಬಲಿಗಳಾಗಿದ್ದಾರೆ. ವಯಸ್ಸಾದ ಅಜ್ಜಿ ಅಂಕಮ್ಮನಿಗೆ ಈ ಎಳೆಯ ಮಕ್ಕಳನ್ನು ಸಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಆದಾಯ ಮೂಲಗಳಿಲ್ಲದೆ ಅಜ್ಜಿ ತನಗೆ ಬರುವ 800 ರೂಪಾಯಿ ವಿಧವಾ ವೇತನದಲ್ಲೇ ಈ ಮಕ್ಕಳನ್ನು ಪೋಷಿಸಬೇಕಾದ ದುಸ್ಥಿಯ ಬಗ್ಗೆ ಏಷ್ಯನೆಟ್ ಸುವರ್ಣ ನ್ಯೂಸ್ ವರದಿ ಮಾಡಿತ್ತು.&lt;/p&gt;&lt;h2&gt;&lt;strong&gt;ಕಣ್ಣೀರ ಕಥೆಗೆ ಮಾನವೀಯತೆ ಸ್ಪಂದನೆ&lt;/strong&gt;&lt;/h2&gt;&lt;p&gt;ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಗಮನಿಸಿದ ಚಾಮರಾಜನಗರ ಜಿಲ್ಲಾ ವೀರಶೈವ ಮಹಾಸಭಾಧ್ಯಕ್ಷ ಮೂಡ್ಲುಪುರ ನಂದೀಶ್, ಮೂಡಲ ಅಗ್ರಹಾರ ಗ್ರಾಮಕ್ಕೆ ಧಾವಿಸಿ ಅನಾಥ ಮಕ್ಕಳ ಪಾಲನೆ ಪೋಷಣೆಗೆ ಧನ ಸಹಾಯ ಮಾಡಿದ್ದಾರೆ. ಅಗತ್ಯ ದಿನಸಿ ಸಾಮಾನುಗಳನ್ನು ನೀಡಿದ್ದಾರೆ ಮಕ್ಕಳು ಒಂದು ಹಂತಕ್ಕೆ ಬರುವ ತನಕ ಇನ್ನು ಮುಂದೆಯು ಪ್ರತಿ ತಿಂಗಳು ಎರಡರಿಂದ ಮೂರು ಸಾವಿರ ರೂಪಾಯಿ ನಗದು ಸಹಾಯ ಹಾಗು ಅಗತ್ಯ ದಿನಸಿ ನೀಡುವುದಾಗಿ ಅವರು ತಿಳಿಸಿದ್ದಾರೆ.&lt;/p&gt;&lt;p&gt;ಅಲ್ಲದೆ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸ್ಪಂಧಿಸಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಮೂಡಲ ಅಗ್ರಹಾರಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿಯು ಮೊಮ್ಮಕ್ಕಳನ್ನು ಸಾಕುತ್ತಿರುವ ಅಜ್ಜಿ ಅಂಕಮ್ಮನಿಗೆ ವಾತ್ಸಲ್ಯ ಕಾರ್ಯಕ್ರಮದಡಿ ಒಂದು ಮನೆ ನಿರ್ಮಾಣ ಹಾಗು ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಧನ ಸಹಾಯ ಮಾಡುವ ಭರವಸೆ ನೀಡಿದ್ದಾರೆ.&lt;/p&gt;&lt;p&gt;ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸ್ಪಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸ್ವಯಂ ಸೇವಕ ಆರ್ ಸತೀಶ್ಕುಮಾರ್ ಗ್ರಾಮಕ್ಕೆ ಧಾವಿಸಿ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ಇಲಾಖೆಗಳಿಂದ ಪಡೆದು ತಂದೆ ತಾಯಿ ಇಲ್ಲದೆ ಅನಾಥರಾಗಿರುವ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿಕೊಡಲು ಕಾರ್ಯನಿರತರಾಗಿದ್ದಾರೆ ಅನಾಥ ಮಕ್ಕಳ ಸಂಕಷ್ಟದ ಬಗ್ಗೆ ಬೆಳಕು ಚಲ್ಲಿ ಅವರಿಗೆ ನೆರವಾಗಲು ಕಾರಣವಾದ ಏಷ್ಯನೆಟ್ ಸುವರ್ಣ ನ್ಯೂಸ್ ಗೆ ಗ್ರಾಮಸ್ಥರು ಧನ್ಯವಾದ ಹೇಳಿದ್ದಾರೆ..&lt;/p&gt;&lt;p&gt;ಅನಾಥ ಮಕ್ಕಳಿಗೆ ಸಹಾಯ ಹಸ್ತ ಚಾಚಿದ ಮೂಡ್ಲುಪುರ ನಂದೀಶ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗು ಕಾನೂನು ಸೇವಕ ಸತೀಶ್ಕುಮಾರ್ ಅವರ ಈ ಮಾನವೀಯ ಕಾರ್ಯ ಅನಾಥ ಮಕ್ಕಳ ಉತ್ತಮ ಭವಿಷ್ಯಕ್ಕೆ ಆಶಾಕಿರಣ ಮೂಡಿಸಿದೆ. ಈ ಮಕ್ಕಳಿಗೆ ಸಹಾಯ ಹಸ್ತ ಚಾಚಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826"/>
        </item>
        <item>
            <title><![CDATA[ಸಚಿವ ಈಶ್ವರ್ ಖಂಡ್ರೆ ಮುಂದೆಯೇ ಕೇರಳದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ]]></title>
            <link>https://kannada.asianetnews.com/state/priyanka-vadra-assurance-in-kerala-election-makes-environmentalist-angry-in-karnataka/articleshow-1kipp5v</link>
            <guid isPermaLink="true">https://kannada.asianetnews.com/state/priyanka-vadra-assurance-in-kerala-election-makes-environmentalist-angry-in-karnataka/articleshow-1kipp5v</guid>
            <pubDate>Thu, 09 Apr 2026 13:33:56 +0530</pubDate>
            <description><![CDATA[&lt;p&gt;Nanjangud Nilambur railway project: ಕೇರಳದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಭರವಸೆಯ ಬಗ್ಗೆ ಈಗ ವ್ಯಾಪಕ ಚರ್ಚೆಯಾಗುತ್ತಿದ್ದು, ಸಾರ್ವಜನಿಕರು ಮಾತ್ರವಲ್ಲದೇ ರಾಜ್ಯದ ಪರಿಸರ ಪ್ರೇಮಿಗಳು ರೈತರು, ಪ್ರಿಯಾಂಕಾ ವಾದ್ರಾ ನೀಡಿದ ಭರವಸೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knrkvm5d56f2jex87z42bkvk,imgname-priyanka-vadra-assurance-in-kerala-election-makes-environmentalist-angry-1775721369773.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ&lt;/strong&gt;&lt;/h2&gt;&lt;p&gt;ಚಾಮರಾಜನಗರ: ಕೇರಳ ವಿಧಾನಸಭಾ ಚುನಾವಣೆಗೆ ಇಂದು ಚುನಾವಣೆ ನಡೆಯುತ್ತಿದ್ದು, 140 ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ರಾಜ್ಯದಾದ್ಯಂತ 2.7 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅರ್ಹರಿದ್ದು, ಎಲ್ಲಾ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಇಲ್ಲಿನ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಭರವಸೆಯ ಬಗ್ಗೆ ಈಗ ವ್ಯಾಪಕ ಚರ್ಚೆಯಾಗುತ್ತಿದ್ದು, ಸಾರ್ವಜನಿಕರು ಮಾತ್ರವಲ್ಲದೇ ಪರಿಸರ ಪ್ರೇಮಿಗಳು ರೈತರು, ಪ್ರಿಯಾಂಕಾ ವಾದ್ರಾ ನೀಡಿದ ಭರವಸೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಹಾಗಿದ್ದರೆ ಸಂಸದೆ ಪ್ರಿಯಾಂಕಾ ವದ್ರಾ ನೀಡಿದ ಭರವಸೆ ಏನು?&lt;/strong&gt;&lt;/h3&gt;&lt;p&gt;ಪ್ರಸ್ತುತ ಬಂಡೀಪುರ ಹುಲಿ ರಕ್ಷಿತಾರಣ್ಯದ ನಡುವೆ ಹಾದು ಹೋಗುವ ಅಂತಾರಾಜ್ಯ ಹೆದ್ದಾರಿಯಲ್ಲಿ ವನ್ಯಜೀವಿಗಳ ಸುರಕ್ಷತೆಯ ಕಾರಣಕ್ಕೆ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ತೆರವು ಮಾಡುವುದಾಗಿ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ. ಕೇರಳದ ಸುಲ್ತಾನ್&zwnj;ಬತ್ತೇರಿಯಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಉಪಸ್ಥಿತಿಯಲ್ಲೇ ಪ್ರಿಯಾಂಕಾ ವಾದ್ರಾ ಈ ಭರವಸೆ ನೀಡಿದ್ದು, ಈ ವಿಚಾರ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಇರುವ ನಿರ್ಬಂಧವನ್ನು ತೆರವು ಮಾಡಲು ಪ್ರಯತ್ನಿಸುವುದಾಗಿ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;6ನೇ ಕ್ಲಾಸ್&zwnj;ನ ಪುಟಾಣಿಗೆ ಸಾಯುವಂತದ್ದೇನಾಗಿತ್ತು? ಕೆಲಸ ಮುಗಿಸಿ ಮನೆಗೆ ಬಂದ ಪೋಷಕರಿಗೆ ಆಘಾತ&lt;/strong&gt;&lt;/p&gt;&lt;p&gt;ಇದೇ ವೇಳೆ ನಂಜನಗೂಡು ನೀಲಂಬೂರು 1 ರೈಲ್ವೆ ಯೋಜನೆ ಬಗ್ಗೆಯೂ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ. ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಹಾಗೂ ನಂಜನಗೂಡು ನೀಲಂಬೂರು ರೈಲ್ವೆ ಯೋಜನೆ ಕುರಿತು ಪ್ರಿಯಾಂಕಾ ವಾದ್ರಾ ನೀಡಿದ ಭರವಸೆಗೆ ಪರಿಸರವಾದಿಗಳು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ರಾಜಕೀಯ ತೆವಲಿಗೆ ಪರಿಸರ ನಾಶವಾಗಬೇಕೆ? ವನ್ಯಪ್ರಾಣಿಗಳು ಬಲಿಯಾಗಬೇಕೆ? ಎಂದು ಪರಿಸರವಾದಿಗಳು ಆಕ್ರೋಶ ಹೊರ ಹಾಕಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಮದುವೆ ಪತ್ರಿಕೆ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ವರ ಸಾವು: ಮದುವೆ ನಡೆಯಬೇಕಾದ ಮನೆಯಲ್ಲಿ ಸೂತಕದ ಛಾಯೆ&lt;/strong&gt;&lt;/p&gt;&lt;p&gt;ಇಲ್ಲಿ ಹಗಲಿನ ವೇಳೆಯಲ್ಲೇ ಸಾಕಷ್ಟು ಅಕ್ರಮ ಚಟುವಟಿಕೆ ನಡೆಯುತ್ತಿದೆ. ಇನ್ನು ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ ಅಕ್ರಮ ಚಟುವಟಿಕೆಗಳಿಗೆ ಇದು ರಹದಾರಿಯಾಗಲಿದೆ. ಮಾನವ ವನ್ಯಜೀವಿ ಸಂಘರ್ಷ ಮತ್ತಷ್ಟು ಹೆಚ್ಚಳ ಆಗುತ್ತೆ, ವನ್ಯಪ್ರಾಣಿಗಳು ಬಲಿಯಾಗುತ್ತವೆ. ನಂಜನಗೂಡು ನೀಲಂಬೂರು ರೈಲು ಯೋಜನೆಗೆ ಕೋಟ್ಯಂತರ ಮರಗಳ ಹನನವಾಗುತ್ತೆ. ಇದರಿಂದ ಪಶ್ಚಿಮ ಘಟ್ಟಗಳ ಜೀವವೈವಿಧ್ಯತೆಗೆ ಧಕ್ಕೆ ಯಾಗುತ್ತೆ. ಕೇವಲ ರಾಜಕೀಯದ ಕಾರಣಕ್ಕೆ ಇಂತಹ ಭರವಸೆಗಳು ನೀಡುವ ಅಗತ್ಯವಿದೆಯೇ ಎಂದು ಪರಿಸರವಾದಿಗಳು ಹಾಗೂ ರೈತರು ಆಕ್ರೋಶ ಹೊರ ಹಾಕಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chamarajnagar</category>
            <dc:creator>Anusha Kb</dc:creator>
            <atom:link href="https://kannada.asianetnews.com/state/priyanka-vadra-assurance-in-kerala-election-makes-environmentalist-angry-in-karnataka/articleshow-1kipp5v"/>
        </item>
        <item>
            <title><![CDATA[ಚಾಮರಾಜನಗರ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ 'ಸೈಕೋ' ಕಳ್ಳನ ಬಂಧನ; ಈತನ ಹವ್ಯಾಸ ಕೇಳಿದ್ರೆ ಬೆಚ್ಚಿಬೀಳ್ತೀರಾ!]]></title>
            <link>https://kannada.asianetnews.com/karnataka-districts/chamarajanagara-psychopath-thief-arrested-for-stealing-women-s-undergarments-sat/articleshow-2tg7yhk</link>
            <guid isPermaLink="true">https://kannada.asianetnews.com/karnataka-districts/chamarajanagara-psychopath-thief-arrested-for-stealing-women-s-undergarments-sat/articleshow-2tg7yhk</guid>
            <pubDate>Thu, 09 Apr 2026 21:09:12 +0530</pubDate>
            <description><![CDATA[&lt;p&gt;ಚಾಮರಾಜನಗರದ ಹಲವು ಬಡಾವಣೆಗಳಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್&zwnj;ನನ್ನು &amp;nbsp;ಬಂಧಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knse4ffq9wtzhwjkfa5ctya1,imgname-chamarajanagar-undergarment-thief-1775748922869.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.09): ಚಾ&lt;/strong&gt;ಮರಾಜನಗರದ ವಿವಿಧ ಬಡಾವಣೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಹಿಳೆಯರಲ್ಲಿ ಆತಂಕ ಮತ್ತು ಅಚ್ಚರಿ ಮೂಡಿಸಿದ್ದ ವಿಚಿತ್ರ ಕಳ್ಳತನ ಪ್ರಕರಣಕ್ಕೆ ಈಗ ತೆರೆ ಬಿದ್ದಿದೆ. ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್ ಎಂಬ ಸೈಕೋಪಾತ್&zwnj;ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.&lt;/p&gt;&lt;h2&gt;&lt;strong&gt;ಮಧ್ಯರಾತ್ರಿ ಮಹಿಳಾ ವೇಷಧಾರಿ ಸೈಕೋಪಾತ್:&lt;/strong&gt;&lt;/h2&gt;&lt;p&gt;ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್&zwnj;ನನ್ನು ಸೆರೆಹಿಡಿದಿದ್ದಾರೆ.&lt;/p&gt;&lt;h3&gt;&lt;strong&gt;ಕಳ್ಳತನದ ವಿಚಿತ್ರ ಶೈಲಿ:&lt;/strong&gt;&lt;/h3&gt;&lt;p&gt;ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ವೈದ್ಯಕೀಯ ಪರೀಕ್ಷೆಗೆ ಸೈಕೋ ಕಳ್ಳ:&lt;/strong&gt;&lt;/h2&gt;&lt;p&gt;ಬಂಧಿತ ಅಮೃತ್&zwnj;ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು. ಆದರೆ ಈಗ ಪೊಲೀಸರು ಆರೋಪಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chamarajanagara-psychopath-thief-arrested-for-stealing-women-s-undergarments-sat/articleshow-2tg7yhk"/>
        </item>
        <item>
            <title><![CDATA[ಚಾಮರಾಜನಗರ ಆಕ್ಸಿಜನ್ ದುರಂತ: ಸಂತ್ರಸ್ತರ ಕುಟುಂಬಕ್ಕೆ ಕೊನೆಗೂ ಸಿಕ್ತು ಸರ್ಕಾರಿ ನೌಕರಿ; ಅರ್ಹರ ಪಟ್ಟಿ ಇಲ್ಲಿದೆ ನೋಡಿ]]></title>
            <link>https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp</link>
            <guid isPermaLink="true">https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp</guid>
            <pubDate>Sun, 19 Apr 2026 13:17:42 +0530</pubDate>
            <description><![CDATA[&lt;p&gt;2021ರ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಕಳೆದ ಐದು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳ ಅರ್ಹ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲು ಏ.21 ರಂದು ಸಿದ್ದರಾಮಯ್ಯ ನೇಮಕಾತಿ ಆದೇಶ ಪತ್ರ ವಿತರಿಸಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpjawjzwe65n240sq115k28h,imgname-chamarajanagar-oxygen-tragedy--1--1776584379388.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.19): ಆ&lt;/strong&gt; ಕರಾಳ ರಾತ್ರಿಯ ಘೋರ ದುರಂತ ನಡೆದು ಇಂದಿಗೆ ಸುಮಾರು 5 ವರ್ಷಗಳಾಗುತ್ತಾ ಬಂದಿವೆ. ಉಸಿರಾಡಲು ಆಕ್ಸಿಜನ್ ಸಿಗದೆ ಪ್ರಾಣಪಕ್ಷಿ ಹಾರಿಹೋದ ಆ ನೋವಿನ ನೆನಪುಗಳು ಇಂದಿಗೂ ಸಂತ್ರಸ್ತ ಕುಟುಂಬಗಳನ್ನು ಕಾಡುತ್ತಿವೆ. ಆದರೆ, ಸಂಕಷ್ಟದಲ್ಲಿದ್ದ ಆ ಕುಟುಂಬಗಳಿಗೆ ಇದೀಗ ಮರುಜೀವ ಸಿಕ್ಕಂತಾಗಿದೆ. ಕಳೆದ ಹಲವು ವರ್ಷಗಳಿಂದ ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ನೌಕರಿಯನ್ನು ನೀಡಲು ಮುಂದಾಗಿದೆ.&lt;/p&gt;&lt;h2&gt;&lt;strong&gt;ಏಪ್ರಿಲ್ 21ಕ್ಕೆ ನೇಮಕಾತಿ ಆದೇಶ ವಿತರಣೆ&lt;/strong&gt;&lt;/h2&gt;&lt;p&gt;ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಏಪ್ರಿಲ್ 21ರಂದು ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಅಧಿಕೃತವಾಗಿ ಸರ್ಕಾರಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಿದ್ದಾರೆ. ಮೊದಲ ಹಂತದಲ್ಲಿ ಅರ್ಹತೆ ಹೊಂದಿರುವ 21 ಮಂದಿಗೆ ಈ ಸರ್ಕಾರಿ ಉದ್ಯೋಗದ ಭಾಗ್ಯ ಸಿಗಲಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ? ಅಂದು ನಡೆದಿದ್ದೇನು?&lt;/strong&gt;&lt;/h2&gt;&lt;p&gt;2021ರ ಮೇ 2ರಂದು ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿತ್ತು. ಕೊರೋನಾ ಎರಡನೇ ಅಲೆಯ ವೇಳೆ ಆಕ್ಸಿಜನ್ ಕೊರತೆಯಿಂದಾಗಿ ಒಂದೇ ರಾತ್ರಿ ಸುಮಾರು 36ಕ್ಕೂ ಹೆಚ್ಚು ಮಂದಿ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಕುಟುಂಬದ ಆಧಾರ ಸ್ತಂಭಗಳನ್ನೇ ಕಳೆದುಕೊಂಡ ಕುಟುಂಬಗಳು ಬೀದಿಗೆ ಬಿದ್ದಿದ್ದವು. ಅಂದಿನಿಂದ ಇಂದಿನವರೆಗೆ ಈ ಕುಟುಂಬಗಳು ತಮಗೆ ನ್ಯಾಯ ಬೇಕು ಮತ್ತು ಜೀವನೋಪಾಯಕ್ಕಾಗಿ ಸರ್ಕಾರಿ ನೌಕರಿ ನೀಡಬೇಕು ಎಂದು ಸತತವಾಗಿ ಹೋರಾಟ ನಡೆಸುತ್ತಾ ಬಂದಿದ್ದರು.&lt;/p&gt;&lt;h3&gt;&lt;strong&gt;ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ನೀಡಿದ್ದ ಭರವಸೆ&lt;/strong&gt;&lt;/h3&gt;&lt;p&gt;ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತ್ತು 'ಭಾರತ್ ಜೋಡೋ ಯಾತ್ರೆ'ಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂತ್ರಸ್ತ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ನೀಡಿದ ಮಾತಿನಂತೆ ಸಿದ್ದರಾಮಯ್ಯ ಸರ್ಕಾರ ತನ್ನ ಭರವಸೆಯನ್ನು ಈಡೇರಿಸುತ್ತಿದೆ.&lt;/p&gt;&lt;h3&gt;&lt;strong&gt;ವಿದ್ಯಾರ್ಹತೆಗೆ ತಕ್ಕಂತೆ ನೌಕರಿ&lt;/strong&gt;&lt;/h3&gt;&lt;p&gt;ಸಂತ್ರಸ್ತ ಕುಟುಂಬದ ಸದಸ್ಯರ ವಿದ್ಯಾರ್ಹತೆಯನ್ನು ಪರಿಗಣಿಸಿ ಅವರಿಗೆ ಸೂಕ್ತವಾದ ಹುದ್ದೆಗಳನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲೇ (CIMS) ಈ ಉದ್ಯೋಗಗಳನ್ನು ನೀಡಲಾಗುತ್ತಿದ್ದು, ಇದು ಸಂತ್ರಸ್ತರಿಗೆ ತಮ್ಮ ಸ್ವಂತ ಜಿಲ್ಲೆಯಲ್ಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿದೆ. ಐದು ವರ್ಷಗಳ ಸುದೀರ್ಘ ಕಾಯುವಿಕೆ ಮತ್ತು ಹೋರಾಟದ ನಂತರ ಸಂತ್ರಸ್ತರ ಕಣ್ಣೀರು ವೊರೆಸುವ ಕೆಲಸಕ್ಕೆ ಸರ್ಕಾರ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.&lt;/p&gt;&lt;p&gt;ಸರ್ಕಾರಿ ಉದ್ಯೋಗ ಪಡೆದವರ ಪಟ್ಟಿ ಇಲ್ಲಿದೆ ನೋಡಿ.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chamarajanagar-oxygen-tragedy-victims-get-government-jobs-cm-siddaramaiah-sat/articleshow-3qefgfp"/>
        </item>
        <item>
            <title><![CDATA[ಕಾವೇರಿ ನದಿಯಲ್ಲಿ ಅಪರಿಚಿತ ಶವ ಪತ್ತೆ: ಹಲವು ಅನುಮಾನಗಳಿಗೆ ಕಾರಣ? ತನಿಖೆ ಶುರು!]]></title>
            <link>https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh</link>
            <guid isPermaLink="true">https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh</guid>
            <pubDate>Wed, 22 Apr 2026 18:15:04 +0530</pubDate>
            <description><![CDATA[&lt;p&gt;ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wdx0cgghy8mx26afg4f5tv,imgname-vdvdv-1757595730320.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.22):&lt;/strong&gt; ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದ್ದು, ಸಂಪೂರ್ಣವಾಗಿ ದೇಹ ಕುಸಿದು ಮೂಳೆಗಳ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾವೇರಿ ನದಿಯ ಮಧ್ಯಭಾಗದಲ್ಲಿ ಶವವೊಂದು ಬಿದ್ದಿರುವ ಫೋಟೋವನ್ನು ಬೆಂಗಳೂರಿನ ಪ್ರವಾಸಿಗನೊಬ್ಬನು ಮೊಬೈಲ್&zwnj;ನಲ್ಲಿ ಸೆರೆಹಿಡಿದು ಮೊಬೈಲ್&zwnj;ನಲ್ಲಿ ಹಾಕಿದ್ದರು.&lt;/p&gt;&lt;p&gt;ತಕ್ಷಣವೇ ಕಾರ್ಯಪ್ರವೃತ್ತರಾದ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಕಾವೇರಿ ನದಿಯ ಬಳಿ ಶವವನ್ನು ಹುಡುಕಲಾರಂಬಿಸಿದರು ಪತ್ತೆಯಾಗದ ಕಾರಣ ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ಜಂಟಿ ಕಾರ್ಯಾಚರಣೆ ಮಾಡುವ ವೇಳೆ ಕಾವೇರಿನದಿಯ ಮಧ್ಯಭಾಗದಲ್ಲಿ ಶವ ದೊರೆತ್ತಿದ್ದು, ಒಂದು ತಿಂಗಳ ಹಿಂದೆ ಮೃತಪಟ್ಟಿದ್ದು ಮೃತದೇಹ ಸಂಪೂರ್ಣ ಕುಸಿದಿದ್ದು ಬರೀ ಮೂಳೆಗಳು ಮಾತ್ರ ಇದ್ದು, ಶವವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;h2&gt;&lt;strong&gt;ವಾರಸುದಾರರಿಗಾಗಿ ಹುಡುಕಾಟ&lt;/strong&gt;&lt;/h2&gt;&lt;p&gt;ಈ ಶವವು ಮದ್ಯಸೇವನೆ ಮಾಡಿ ಸಾವನ್ನಪ್ಪಿರಬಹುದೆಂದು ಇಲ್ಲಾ ನದಿಗೆ ಯಾರಾದರೂ ಕೊಲೆ ಮಾಡಿ ಬೀಸಾಡಿರಬಹುದು ಅಥವಾ ಆಕಸ್ಮಿಕವಾಗಿ ಜಾರಿ ಮೃತಪಟ್ಟಿರಬಹುದೆಂದು ಊಹಿಸಲಾಗಿದ್ದು, ನಿಖರ ಮಾಹಿತಿ ತನಿಖೆಯಿಂದಷ್ಟೆ ಹೊರ ಬರಬೇಕಿದೆ. ಅಪರಿಚಿತ ಶವ ಎಂದು ದೂರು ದಾಖಲಾಗಿದ್ದು, ವಾರಸುದಾರರಿಗಾಗಿ ಹುಡುಕಾಟ ನಡೆದಿದ್ದು, ಶವವನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇದು ಕೊಲೆಯೋ ಆತ್ಮ*ಹತ್ಯೆಯೋ ತನಿಖೆಯಿಂದಷ್ಟೆ ತಿಳಿಯಬೇಕಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh"/>
        </item>
        <item>
            <title><![CDATA[Suvarna News Impact: ದಯಾಮರಣ ಕೇಳಿದ್ದ ವೃದ್ಧೆಯ ಅಳಲಿಗೆ ಕರಗಿದ ಸಿಎಂ; ಮೆದಗಾಣೆ ಹಳ್ಳಿಗೆ ಬಂತು ಕರೆಂಟ್!]]></title>
            <link>https://kannada.asianetnews.com/karnataka-districts/suvarna-news-impact-cm-siddaramaiah-electricity-medagane-village-kempamma-san/articleshow-7952g9d</link>
            <guid isPermaLink="true">https://kannada.asianetnews.com/karnataka-districts/suvarna-news-impact-cm-siddaramaiah-electricity-medagane-village-kempamma-san/articleshow-7952g9d</guid>
            <pubDate>Sat, 18 Apr 2026 14:25:37 +0530</pubDate>
            <description><![CDATA[&lt;p&gt;ಹನೂರು ತಾಲೂಕಿನ ಮೆದಗಾಣೆ ಗ್ರಾಮದ ವೃದ್ಧೆ ಕೆಂಪಮ್ಮ ಅವರು ವಿದ್ಯುತ್&zwnj;ಗಾಗಿ ಬರೆದ ದಯಾಮರಣ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಸುವರ್ಣ ನ್ಯೂಸ್ ವರದಿಯ ಫಲವಾಗಿ, ದಶಕಗಳಿಂದ ಕತ್ತಲೆಯಲ್ಲಿದ್ದ ಗ್ರಾಮಕ್ಕೆ ಸಮರೋಪಾದಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpfwtvw5s385r3jcqynxtnja,imgname-chamarajanagara-hanur1-1776502534021.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.18): &lt;/strong&gt;ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ವಿದ್ಯುತ್ ಕಾಣದ ಹನೂರು ತಾಲೂಕಿನ ಮೆದಗಾಣೆ ಗ್ರಾಮದ ವೃದ್ಧೆಯೊಬ್ಬರ ಅಳಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಸ್ಪಂದಿಸಿದ್ದಾರೆ. 'ನಮಗೆ ವಿದ್ಯುತ್ ಕೊಡಿ ಇಲ್ಲವೇ ದಯಾಮರಣ ನೀಡಿ' ಎಂದು ಕೆಂಪಮ್ಮ ಎಂಬುವವರು ಬರೆದಿದ್ದ ಪತ್ರದ ಕುರಿತು ಸುವರ್ಣ ನ್ಯೂಸ್ ಬಿತ್ತರಿಸಿದ ವಿಶೇಷ ವರದಿಗೆ ಮಣಿದ ಸಿಎಂ ಕಚೇರಿ, ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ.&lt;/p&gt;&lt;h2&gt;&lt;strong&gt;ವರದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಸ್ಪಂದನೆ!&lt;/strong&gt;&lt;/h2&gt;&lt;p&gt;ಮೆದಗಾಣೆ ಹಾಡಿಯ ಕೆಂಪಮ್ಮ (60) ಅವರು ಮೂರು ತಲೆಮಾರುಗಳಿಂದ ಮೂಲಸೌಕರ್ಯವಿಲ್ಲದೆ ಅನುಭವಿಸುತ್ತಿದ್ದ ಪಡಿಪಾಟಲನ್ನು ಸುವರ್ಣ ನ್ಯೂಸ್ ವಿಸ್ತೃತವಾಗಿ ಬಿತ್ತರಿಸಿತ್ತು. ಅಧಿಕಾರಿಗಳ ವಿಳಂಬ ಧೋರಣೆ ಹಾಗೂ ದೃಷ್ಟಿಮಾಂದ್ಯತೆಯಿಂದಾಗಿ ವೃದ್ಧೆ ಅನುಭವಿಸುತ್ತಿದ್ದ ನರಕಯಾತನೆಯ ದೃಶ್ಯಗಳು ರಾಜ್ಯದ ಗಮನ ಸೆಳೆದಿದ್ದವು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಕ್ಷಣವೇ ಜಿಲ್ಲಾಧಿಕಾರಿಗಳು ಹಾಗೂ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.&lt;/p&gt;&lt;h2&gt;&lt;strong&gt;ಕತ್ತಲು ಸರಿಸಿ ಬಂದ ಭಾಗ್ಯಜ್ಯೋತಿ&lt;/strong&gt;&lt;/h2&gt;&lt;p&gt;ಸಿಎಂ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಮತ್ತು ಇಂಧನ ಇಲಾಖೆ ಅಧಿಕಾರಿಗಳು ಅಡೆತಡೆಗಳನ್ನು ನಿವಾರಿಸಿ, ಮೆದಗಾಣೆ ಗ್ರಾಮಕ್ಕೆ ವಿದ್ಯುತ್ ಲೈನ್&zwnj;ಗಳನ್ನು ಎಳೆಯುವಲ್ಲಿ ಯಶಸ್ವಿಯಾಗಿದ್ದಾರೆ. 79 ವರ್ಷಗಳಿಂದ ಸೀಮೆಎಣ್ಣೆ ಬುಡ್ಡಿ ದೀಪದ ಕೆಳಗೆ ಜೀವನ ಸಾಗಿಸುತ್ತಿದ್ದ ಆದಿವಾಸಿ ಕುಟುಂಬಗಳ ಮನೆಯಲ್ಲಿ ಇಂದು ಮೊದಲ ಬಾರಿಗೆ ವಿದ್ಯುತ್ ಬಲ್ಬ್&zwnj;ಗಳು ಬೆಳಗಿವೆ. ಕೆಂಪಮ್ಮ ಅವರ ಮೊಮ್ಮಕ್ಕಳು ಇನ್ನು ಮುಂದೆ ಕತ್ತಲಲ್ಲಿ ಓದುವ ಅನಿವಾರ್ಯತೆ ತಪ್ಪಿದೆ.&lt;/p&gt;&lt;p&gt;&quot;ನನ್ನ ಮೊಮ್ಮಕ್ಕಳ ಭವಿಷ್ಯಕ್ಕಾಗಿ ನಾನು ದಯಾಮರಣ ಕೇಳಿದ್ದೆ. ಆದರೆ ಸುವರ್ಣ ನ್ಯೂಸ್ ನನ್ನ ಧ್ವನಿಯಾಗಿ ಸಿಎಂಗೆ ತಲುಪಿಸಿತು. ನಮ್ಮ ಹಳ್ಳಿಗೆ ವಿದ್ಯುತ್ ಬಂದಿರುವುದು ನಮಗೆ ಮರುಜನ್ಮ ಸಿಕ್ಕಂತಾಗಿದೆ,&quot; ಎಂದು ವೃದ್ಧೆ ಕೆಂಪಮ್ಮ ಭಾವುಕರಾಗಿ ನುಡಿದಿದ್ದಾರೆ. ಆರು ದಿನಗಳ ಉಪವಾಸ ಸತ್ಯಾಗ್ರಹಕ್ಕೂ ಬಗ್ಗದ ಜಿಲ್ಲಾಡಳಿತ, ಸಿಎಂ ಕಚೇರಿಯ ಕಟ್ಟುನಿಟ್ಟಿನ ಆದೇಶಕ್ಕೆ ಬೆದರಿ ರಾತ್ರೋರಾತ್ರಿ ಕೆಲಸ ಪೂರೈಸಿರುವುದು ವಿಶೇಷ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chamarajnagar</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/suvarna-news-impact-cm-siddaramaiah-electricity-medagane-village-kempamma-san/articleshow-7952g9d"/>
        </item>
        <item>
            <title><![CDATA[ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬರ್ತಾನೆ, ಮಹಿಳೆಯರ ಒಳಉಡುಪು ಕದ್ದುಕೊಂಡು ಹೋಗ್ತಾನೆ: ಸೈಕೋ ಕಾಟಕ್ಕೆ ಬೆಚ್ಚಿದ ಹೆಂಗಸರು!]]></title>
            <link>https://kannada.asianetnews.com/gallery/karnataka-districts/chamarajanagar-psycho-stealing-womens-undergarments-cctv-footage-viral-san-h5g8ihm</link>
            <guid isPermaLink="true">https://kannada.asianetnews.com/gallery/karnataka-districts/chamarajanagar-psycho-stealing-womens-undergarments-cctv-footage-viral-san-h5g8ihm</guid>
            <pubDate>Wed, 08 Apr 2026 13:37:17 +0530</pubDate>
            <description><![CDATA[ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knp1y00hqyzv52qwwcwv6frd,imgname-chamarajanagar-psycho--2--1775635464209.jpg" type="image/jpeg" height="390" width="690"/>
            <content:encoded><![CDATA[ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದಾನೆ. ಈತನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆದ ನಂತರ ಸ್ಥಳೀಯರು ಆತಂಕಗೊಂಡಿದ್ದಾರೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.&lt;img&gt;&lt;p&gt;ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಅವುಗಳನ್ನು ಧರಿಸುವ ವಿಕೃತ ಮನಸ್ಥಿತಿಯ ವ್ಯಕ್ತಿಯೊಬ್ಬನ ಉಪಟಳ ಹೆಚ್ಚಾಗಿದೆ. ಈತನ ಅಸಹ್ಯಕರ ವರ್ತನೆಯಿಂದ ಸ್ಥಳೀಯ ಮಹಿಳೆಯರು ಆತಂಕಗೊಂಡಿದ್ದಾರೆ.&lt;/p&gt;&lt;img&gt;&lt;p&gt;ಮನೆಯ ಮುಂದೆ ಒಣಗಲು ಹಾಕಿದ್ದ ಒಳಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ವ್ಯಕ್ತಿಯೊಬ್ಬ ಕಳ್ಳತನ ಮಾಡುತ್ತಿರುವ ದೃಶ್ಯ ಸ್ಪಷ್ಟವಾಗಿ ಸೆರೆಯಾಗಿದೆ.&lt;/p&gt;&lt;img&gt;&lt;p&gt;ಆರೋಪಿಯ ವಿಕೃತ ಚಟುವಟಿಕೆಯ ವಿಡಿಯೋ ತುಣುಕುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ಈ ದೃಶ್ಯಗಳನ್ನು ನೋಡಿ ಸಾರ್ವಜನಿಕರು ಆತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿಗಳಿಗೆ ರಾತ್ರಿ ವೇಳೆ ಹೊರಬರಲು ಭಯವಾಗುತ್ತಿದೆ. ಒಳಉಡುಪು ಕದ್ದು ಅದನ್ನು ಧರಿಸುವ ಇಂತಹ ಸೈಕೋ ವ್ಯಕ್ತಿಗಳು ಮುಂದೆ ಮತ್ತಷ್ಟು ದೊಡ್ಡ ಅನಾಹುತಗಳನ್ನು ಮಾಡಬಹುದೇ ಎಂಬ ಆತಂಕ ಮನೆಮಾಡಿದೆ.&lt;/p&gt;&lt;img&gt;&lt;p&gt;ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ ಚಾಮರಾಜನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಆ ವಿಕೃತ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/karnataka-districts/chamarajanagar-psycho-stealing-womens-undergarments-cctv-footage-viral-san-h5g8ihm"/>
        </item>
        <item>
            <title><![CDATA['ಇನ್ಮುಂದೆ ಕಾಂಗ್ರೆಸ್‌ ಸ್ಮಶಾನಕ್ಕೆ ಹೋದ ಹೆಣದಂತೆ' ಗುಂಡ್ಲುಪೇಟೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಗುಡುಗು]]></title>
            <link>https://kannada.asianetnews.com/politics/womens-reservation-bill-fail-chalavadi-narayanaswamy-slam-against-congress-government-rav/articleshow-h89ovqd</link>
            <guid isPermaLink="true">https://kannada.asianetnews.com/politics/womens-reservation-bill-fail-chalavadi-narayanaswamy-slam-against-congress-government-rav/articleshow-h89ovqd</guid>
            <pubDate>Tue, 21 Apr 2026 12:14:58 +0530</pubDate>
            <description><![CDATA[&lt;p&gt;ಗುಂಡ್ಲುಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೀಸಲು, ಬೆಲೆ ಏರಿಕೆ, &amp;nbsp;ದಲಿತರಿಗೆ ಅನ್ಯಾಯ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpqchrzfz21mf65h7m08n3e0,imgname-----------------------2026-04-21t115832.225-1776753894383.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಂಡ್ಲುಪೇಟೆ (ಏ.21): &lt;/strong&gt;ಮಹಿಳಾ ಮೀಸಲು ವಿಧೇಯಕ ಸೋಲಿಗೆ ಕಾರಣವಾದ ಕಾಂಗ್ರೆಸ್&zwnj; ಪಕ್ಷ 70 ಕೋಟಿ ಮಹಿಳೆಯರಿಗೆ ಮುಖಭಂಗ ಮಾಡಿದ್ದು, ಇನ್ಮುಂದೆ ಕಾಂಗ್ರೆಸ್&zwnj; ಸ್ಥಿತಿ ಸ್ಮಶಾನಕ್ಕೆ ಹೋದ ಹೆಣದಂತಾಗುತ್ತದೆ ಎಂದು ವಿಧಾನ ಪರಿಷತ್&zwnj; ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.&lt;/p&gt;&lt;p&gt;ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳಾ ಮೀಸಲು ಸಾಂವಿಧಾನಿಕ ತಿದ್ದುಪಡಿ ಮಸೂದೆ ಸೋಲಿಗೆ ಕಾಂಗ್ರೆಸ್&zwnj; ಹಾಗೂ ಅದರ ಮಿತ್ರ ಪಕ್ಷಗಳು ಕಾರಣವಾಗಿವೆ. ದೇಶದ ಶೇ.೫೦ರಷ್ಟಿರುವ ಮಹಿಳೆಯರು ಕಾಂಗ್ರೆಸನ್ನು ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಬಹುಮಾನ ಕೊಡಬಹುದು:ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್&zwnj; ಸರ್ಕಾರ ಹಾಗೂ ಮುಖ್ಯಮಂತ್ರಿಗೆ ಮೊದಲ ಬಹುಮಾನ ಕೊಡಬಹುದು. ಬೆಲೆ ಏರಿಕೆಯಲ್ಲಿ ಕಾಂಗ್ರೆಸ್&zwnj; ಮೀರಿಸೋದಕ್ಕೆ ಯಾವ ಪಕ್ಷದ ಸರ್ಕಾರದಿಂದಲೂ ಸಾಧ್ಯವಿಲ್ಲ ಎಂದರು.&lt;/p&gt;&lt;h2&gt;ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ:&lt;/h2&gt;&lt;p&gt;ಕಾಂಗ್ರೆಸ್&zwnj; ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ದಿವಾಳಿಯಾಗಿದೆ. ಅಲ್ಲಿನ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ. ಶೌಚಾಲಯಕ್ಕೂ ಟ್ಯಾಕ್ಸ್&zwnj; ಹಾಕಲು ಅಲ್ಲಿನ ಸರ್ಕಾರ ಹೊರಟಿದೆ. ನಮ್ಮ ರಾಜ್ಯ ಸರ್ಕಾರ ಕೂಡ ಪ್ರಧಾನಿ ಮೋದೀಜಿ ಕಟ್ಟಿಸಿದ ಶೌಚಾಲಯಕ್ಕೂ ಟ್ಯಾಕ್ಸ್&zwnj; ಹಾಕುತ್ತಾರೇನೋ ಕಾದು ನೋಡಬೇಕು ಎಂದರು.&lt;/p&gt;&lt;h3&gt;ದಲಿತರಿಗೆ ಅನ್ಯಾಯ:&lt;/h3&gt;&lt;p&gt;ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್&zwnj;ಇಪಿ, ಟಿಎಸ್&zwnj;ಪಿ ಹಣ ಬಳಕೆ ಮಾಡಿಕೊಂಡಿದೆ. ಹೀಗಾದಾಗ ದಲಿತರಿಗೆಲ್ಲಿ ಫ್ರೀ ಗ್ಯಾರಂಟಿ ಸಿಕ್ಕಿದಂತಾಗುತ್ತದೆ? ಇತ್ತ ಒಳ ಮೀಸಲಾತಿಯಲ್ಲೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.&lt;/p&gt;&lt;p&gt;ಪತ್ರಿಕಾಗೋಷ್ಠಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಸಿ.ಮಹದೇವಪ್ರಸಾದ್&zwnj;, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್&zwnj;, ಜಿಲ್ಲಾ ಬಿಜೆಪಿ ಎಸ್&zwnj;ಸಿ ಮೋರ್ಚಾ ಅಧ್ಯಕ್ಷ ಡಾ.ನವೀನ್&zwnj; ಮೌರ್ಯ, ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಸುರೇಶ್&zwnj;, ಮಂಡಲ ಪ್ರಧಾನ ಕಾರ್ಯದರ್ಶಿ ಗರಗನಹಳ್ಳಿ ಮಹೇಂದ್ರ, ದಲಿತ ಮುಖಂಡ ಬಸವರಾಜು, ರಾಜೇಂದ್ರ ಸೇರಿದಂತೆ ಹಲವರಿದ್ದರು.&lt;/p&gt;&lt;p&gt;----------&lt;/p&gt;&lt;p&gt;ಅಕ್ರಮ ಗಣಿಗಾರಿಕೆ; ಪತ್ರಕರ್ತರು ಸಿಎಂ ಪ್ರಶ್ನೆ ಮಾಡಿ&lt;/p&gt;&lt;p&gt;ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಲಹೆ&lt;/p&gt;&lt;p&gt;ಗುಂಡ್ಲುಪೇಟೆ: ಗುಂಡ್ಲುಪೇಟೆಗೆ ಇಂದು ಮುಖ್ಯಮಂತ್ರಿಗಳು ಬರುತ್ತಿದ್ದಾರೆ. ಅಕ್ರಮ ಗಣಿಗಾರಿಕೆಗೆ ಬಗ್ಗೆ ನಿಮ್ಮ ಬೆಂಬಲವಿದೆಯಾ ಎಂಬುದರ ಬಗ್ಗೆ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿ ಎಂದು ವಿಧಾನ ಪರಿಷತ್&zwnj; ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರಕರ್ತರಿಗೆ ಮನವಿ ಮಾಡಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಗಣಿಗಾರಿಕೆಗೆ ಬೆಂಬಲಿಸ್ತೀರಾ? ಎಂದು ಮಂಗಳವಾರ ಗುಂಡ್ಲುಪೇಟೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳನ್ನೇ ಕೇಳಬೇಕು, ಇಂಥವರ ಮೇಲೆ ಕ್ರಮ ಜರುಗಿಸುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿ ಎಂದು ಸಲಹೆ ನೀಡಿದರು.&lt;/p&gt;&lt;p&gt;ಇಲ್ಲಿನ ಶಾಸಕರೇ ಅಕ್ರಮ ಗಣಿಗಾರಿಕೆಯಲ್ಲಿ ಪಾಲುದಾರರು, ಅಕ್ರಮ ಗಣಿಗಾರಿಕೆಗೆ ಶಾಸಕ ಸ್ಥಾನ ಬೇಕಾ? ಅಕ್ರಮ ಗಣಿಗಾರಿಕೆ ಮಾಡೋದಾದರೆ ನೀವು ಶಾಸಕನಾಗಲು ನಾಲಾಯಕ್&zwnj; ಎಂದು ಶಾಸಕ ಗಣೇಶ್&zwnj; ಪ್ರಸಾದ್&zwnj; ವಿರುದ್ಧ ವಾಗ್ದಾಳಿ ನಡೆಸಿದರು.&lt;/p&gt;&lt;p&gt;ಸ್ಥಳೀಯ ಶಾಸಕರಾದ ಗಣೇಶ್&zwnj; ಪ್ರಸಾದ್&zwnj; ಶಾಸಕರಾಗಿರುವವರೆಗೂ ಅವರು ನಡೆಸುವ ಎಲ್ಲಾ ಉದ್ದಿಮೆಗಳನ್ನು ರಾಜ್ಯ ಸರ್ಕಾರ ರದ್ದು ಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಗುಂಡ್ಲುಪೇಟೆ ತಾಲೂಕಿನ ಅಕ್ರಮ ಗಣಿಗಾರಿಕೆಗೆ ಸ್ಥಳೀಯ ಶಾಸಕರೇ ಕಾರಣರಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳು ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.&lt;/p&gt;&lt;p&gt;------------ಸಿದ್ದು ಕೈ ಬಿಡೋವಾಗ ಕಾಂಗ್ರೆಸ್&zwnj; ನಿರ್ಣಾಮ ಗ್ಯಾರಂಟಿ: ಛಲವಾದಿ&lt;/p&gt;&lt;p&gt;ಗುಂಡ್ಲುಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಡುವಾಗ ಕಾಂಗ್ರೆಸ್&zwnj; ನಿರ್ಣಾಮ ಮಾಡುತ್ತಾರೆ ಎಂದು ವಿಧಾನ ಪರಿಷತ್&zwnj; ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್&zwnj;ಗೆ ಸೇರುವುದಕ್ಕೂ ಮುನ್ನ ನೇರ ನಡೆಗೆ ಹೆಸರಾಗಿದ್ದರು. ಕಾಂಗ್ರೆಸ್&zwnj; ಸೇರಿದ ಬಳಿಕ ಕಾಂಗ್ರೆಸ್ಸಿಗರನ್ನೇ ಮುಳುಗಿಸುವ ಸುಳ್ಳು ಹೇಳಿ ಮುಖ್ಯಮಂತ್ರಿಯಾದರು. ಸಿದ್ದರಾಮಯ್ಯ ಹಸಿ ಸುಳ್ಳುಗಾರರಲ್ಲಿ ಸುಳ್ಳುಗಾರ ಎಂದು ಜರಿದರು.&lt;/p&gt;]]></content:encoded>
            <category>chamarajnagar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/womens-reservation-bill-fail-chalavadi-narayanaswamy-slam-against-congress-government-rav/articleshow-h89ovqd"/>
        </item>
        <item>
            <title><![CDATA[ಭಾರತದ ನರ್ಸಿಂಗ್‌ಗೆ ಪ್ರಪಂಚದಾದ್ಯಂತ ಬೇಡಿಕೆ: ಸಚಿವ ದಿನೇಶ್‌ ಗುಂಡೂರಾವ್‌]]></title>
            <link>https://kannada.asianetnews.com/karnataka-districts/dinesh-gundu-rao-nursing-demand-abroad-karnataka-event-gundlupet-gvd/articleshow-hyvkk3h</link>
            <guid isPermaLink="true">https://kannada.asianetnews.com/karnataka-districts/dinesh-gundu-rao-nursing-demand-abroad-karnataka-event-gundlupet-gvd/articleshow-hyvkk3h</guid>
            <pubDate>Mon, 13 Apr 2026 17:50:04 +0530</pubDate>
            <description><![CDATA[&lt;p&gt;ಭಾರತದ ನರ್ಸ್&zwnj;ಗಳಿಗೆ ಜಪಾನ್&zwnj;, ಯುರೋಪ್&zwnj;, ಮಧ್ಯಪ್ರಾಚ್ಯ ಸೇರಿ ಪ್ರಪಂಚದಾದ್ಯಂತ ಬೇಡಿಕೆಯಿದೆ. ವೃತ್ತಿಗೆ ಗೌರವವಿದೆ, ಗಾಜುಗಣ್ಣಿನ ಶಾಸಕ ಗಣೇಶ್&zwnj; ಪ್ರಸಾದ್&zwnj; ಎಂದು ಆರೋಗ್ಯ ಸಚಿವ ದಿನೇಶ್&zwnj; ಗುಂಡೂರಾವ್&zwnj; ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jx1gjez9aff1ggdmjvvwzczc,imgname-----------------------2025-06-06t074851.327-1749176368105.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಂಡ್ಲುಪೇಟೆ (ಏ.13):&lt;/strong&gt; ಭಾರತದ ನರ್ಸ್&zwnj;ಗಳಿಗೆ ಜಪಾನ್&zwnj;, ಯುರೋಪ್&zwnj;, ಮಧ್ಯಪ್ರಾಚ್ಯ ಸೇರಿ ಪ್ರಪಂಚದಾದ್ಯಂತ ಬೇಡಿಕೆಯಿದೆ. ವೃತ್ತಿಗೆ ಗೌರವವಿದೆ ಎಂದು ಆರೋಗ್ಯ ಸಚಿವ ದಿನೇಶ್&zwnj; ಗುಂಡೂರಾವ್&zwnj; ಹೇಳಿದರು. ತಾಲೂಕಿನ ಗರಗನಹಳ್ಳಿ ಬಳಿಯ ಸಂತ ಮಾಥಾ ನರ್ಸಿಂಗ್&zwnj; ಘಟಿಕೋತ್ಸವದಲ್ಲಿ ಪದವಿ ಪ್ರದಾನ ಹಾಗೂ ನೂತನ ಕಾಲೇಜು ಕಟ್ಟಡ ಉದ್ಘಾಟಿಸಿ ಮಾತನಾಡಿದರು.&lt;/p&gt;&lt;p&gt;ನರ್ಸಿಂಗ್&zwnj; ವೃತ್ತಿಗೆ ವಿದೇಶಗಳಲ್ಲೂ ಬೇಡಿಕೆಯಿದೆ ಜೊತೆಗೆ ಭಾವನಾತ್ಮಕ, ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಮುಂದೆ ಭವಿಷ್ಯವಿದೆ ಎಂದು ಪ್ರತಿಪಾದಿಸಿದರು. ನರ್ಸ್&zwnj; ಸೇವೆಯೇ ಅತ್ಯಮೂಲ್ಯ ಸೇವೆ. ರೋಗಳಿಗೆ ಸಮಸ್ಯೆಗೆ ವೈದ್ಯರು ಅರ್ಧದಷ್ಟು ಸಮಸ್ಯೆ ಬಗೆಹರಿಸಿದರೆ ನರ್ಸ್&zwnj;ಗಳೂ ಕೂಡ ಅರ್ಧದಷ್ಟು ಸಮಸ್ಯೆ ಬಗೆಹರಿಸುತ್ತಿದ್ದಾರೆ.&lt;/p&gt;&lt;p&gt;ಭಾರತ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಜನತೆಯ ಜೀವತಾವಧಿ 35 ಎಂದು ಪರಿಗಣಿಸಲಾಗಿತ್ತು. ಆರೋಗ್ಯ ಕ್ಷೇತ್ರದಲ್ಲಿ ಬದಲಾದ ತಂತ್ರಜ್ಞಾನ ಇತ್ಯಾದಿ ಪ್ರಯೋಗಿಕ ವಲಯಗಳಲಿ ಇದೀಗ ಜನತೆಯ ಜೀವಿತಾವಧಿ ದ್ವಿಗುಣವಾಗಿದೆ ಎಂದು ಹೇಳಲಾಗುತ್ತಿದೆ ಎಂದರು. ಸಂತ ಮಾಥ ನರ್ಸಿಂಗ್&zwnj; ಕಾಲೇಜು ಯಶಸ್ವಿಯಾಗಿ 2 ವರ್ಷ ಪೂರೈಸಿದೆ. ಮೊದಲನೇ ಬ್ಯಾಚ್&zwnj;ನ ಪದವಿ ಪಡೆದ ನರ್ಸಿಂಗ್&zwnj; ವಿದ್ಯಾರ್ಥಿಗಳನ್ನು ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;&lt;p&gt;ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಲಸ್ಸೇರಿ ಆರ್ಚ್&zwnj; ಬೀಷಪ್&zwnj; ಮಾರ್&zwnj; ಜೋಸೆಫ್&zwnj; ಪಾಂಪ್ಲಾನಿ ಮಾತನಾಡಿದರು. ಕರ್ನಾಟಕ ನರ್ಸಿಂಗ್&zwnj; ಕೌನ್ಸಿಲ್&zwnj; ರಿಜಿಸ್ಟ್ರಾರ್&zwnj; ಶ್ರೀಕಾಂತ್&zwnj; ಫುಲಾರಿ ಘಟಿಕೋತ್ಸವದಲ್ಲಿ ನರ್ಸಿಂಗ್&zwnj; ಪದವಿ ಪಡೆದವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಂಶುಪಾಲ ಆರ್&zwnj;.ಎಸ್. ಸಂತೋಷ್&zwnj; ಕುಮಾರ್&zwnj; ಕಾಲೇಜು ವಾರ್ಷಿಕ ವರದಿ ಮಂಡಿಸಿದರು.&lt;/p&gt;&lt;p&gt;ಸಮಾರಂಭದಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ಶಾಸಕ, ವಕೀಲ ಸಜೀವ್&zwnj; ಜೋಸೆಫ್&zwnj;, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ್ಯಾಧಿಕಾರಿ ಎಸ್. ಚಿದಂಬರ, ಗುಂಡ್ಲುಪೇಟೆ ಕ್ರೈಸ್ಟ್&zwnj; ಸಿಎಂಐ ಪಬ್ಲಿಕ್&zwnj; ಶಾಲೆಯ ಪ್ರಾಂಶುಪಾಲ ರಿತಿಯಾ ಪುರಿಯಾಂಬಿಲ್&zwnj;, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಸ್. ಶಿವನಾಗಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಮಂಚಹಳ್ಳಿ ಲೋಕೇಶ್&zwnj;, ಮುಖಂಡರಾದ ಸಿದ್ದಪ್ಪ, ಹರೀಶ್&zwnj;, ಸಂತೋಷ್&zwnj;, ಕ್ರೈಸ್ತ ಸಮಾಜದ ಬೈಜು ಸೇರಿದಂತೆ ಸಂತ ಮಾಥ ನರ್ಸಿಂಗ್&zwnj; ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೋಷಕರು ಇದ್ದರು.&lt;/p&gt;&lt;h2&gt;&lt;strong&gt;&lsquo;ಗಾಜುಗಣ್ಣಿನ ಶಾಸಕ ಗಣೇಶ್&zwnj; ಪ್ರಸಾದ್&zwnj;&rsquo;&lt;/strong&gt;&lt;/h2&gt;&lt;p&gt;ನಾನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್&zwnj; ಸೂಚನೆ ಮೇರೆಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಗುಂಡ್ಲುಪೇಟೆ ಶಾಸಕ ನನಗೆ ಆತ್ಮೀಯ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಲಿಗಣ್ಣಿನ ಶಾಸಕ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್&zwnj; ಗುಂಡೂರಾವ್&zwnj; ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್&zwnj; ಪ್ರಸಾದ್&zwnj;ರ ಬಗ್ಗೆ ಹೇಳಿದ ಮಾತು.&lt;/p&gt;&lt;p&gt;ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್&zwnj; ಪ್ರಸಾದ್&zwnj; ಪವರ್&zwnj;ಫುಲ್&zwnj;, ಮುಖ್ಯಮಂತ್ರಿಗೆ ಆತ್ಮೀಯ ಗಣೇಶ್&zwnj; ಪ್ರಸಾದ ಹೇಳಿದ ಕೆಲಸಗಳಿಗೆಲ್ಲ ಹಿಂದೆ ಮುಂದೆ ನೋಡದೆ ಮಂಜೂರು ಮಾಡುತ್ತಿದ್ದಾರೆ. ಒಳ್ಳೆ ಶಾಸಕ ಸಿಕ್ಕಿದ್ದಾರೆ ಬಳಸಿಕೊಂಡು ಒಳ್ಳೆ ಕೆಲಸ ಮಾಡಿ ಎಂದರು. ನರ್ಸಿಂಗ್&zwnj; ವೃತ್ತಿ ದೊಡ್ಡ ಪವಿತ್ರ ಕ್ಷೇತ್ರವಾಗಿದ್ದು, ಪದವಿ ಪಡೆದವರಿಗೆ ಮುಂದೆ ಭವಿಷ್ಯವಿದೆ. ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಿ ಎಂದು ಶಾಸಕ ಗಣೇಶ್ ಪ್ರಸಾದ್&zwnj; ಸಲಹೆ ನೀಡಿದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dinesh-gundu-rao-nursing-demand-abroad-karnataka-event-gundlupet-gvd/articleshow-hyvkk3h"/>
        </item>
        <item>
            <title><![CDATA[ಅನಾಥ ಕಂದಮ್ಮಗಳಿಗೆ ಆಧಾರ್ ಕೂಡ ಸಿಗದೇ ಸಂಕಷ್ಟ:  ಚಾಮರಾಜನಗರದಲ್ಲಿ ಕರುಣಾಜನಕ ಘಟನೆ]]></title>
            <link>https://kannada.asianetnews.com/karnataka-districts/chamarajanagar-orphan-children-aadhaar-card-help-needed-gvd/articleshow-m9hbdwg</link>
            <guid isPermaLink="true">https://kannada.asianetnews.com/karnataka-districts/chamarajanagar-orphan-children-aadhaar-card-help-needed-gvd/articleshow-m9hbdwg</guid>
            <pubDate>Thu, 16 Apr 2026 18:03:15 +0530</pubDate>
            <description><![CDATA[&lt;p&gt;ಚಾಮರಾಜನಗರದ ಮೂಡಲ ಅಗ್ರಹಾರದ ಮಹದೇವ ಕುಡಿತದ ದಾಸನಾಗಿದ್ದ. ಎರಡು ತಿಂಗಳ ಹಿಂದೆ ಕುಡಿದ ಅಮಲಿನಲ್ಲಿ ತನ್ನ ಪತ್ನಿ ಸುಮತಿಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದ. ಸುಟ್ಟಗಾಯಗಳಿಂದ ಸುಮತಿ ಮೃತಪಟ್ಟಿದ್ದಳು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpb4fg7xgm2p3d35rc7cdjqp,imgname-hchh-1776342778109.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.16): &lt;/strong&gt;ಅಮ್ಮ ಕೊಲೆಯಾಗಿದ್ದಾಳೆ. ಕೊಲೆ ಮಾಡಿದ ಅಪ್ಪ ಜೈಲು ಸೇರಿದ್ದಾನೆ. ಈ ದಂಪತಿಯ ಹೆಣ್ಣು ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. ಈ ಅನಾಥ ಮಕ್ಕಳಿಗೆ ಕನಿಷ್ಟ ಆಧಾರ್ ಕಾರ್ಡ್ ಕೂಡ ಸಿಗದೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಚಾಮರಾಜನಗರ ತಾಲೋಕಿನ ಮೂಡಲ ಅಗ್ರಹಾರದ ಮಹದೇವ ಕುಡಿತದ ದಾಸನಾಗಿದ್ದ. ಎರಡು ತಿಂಗಳ ಹಿಂದೆ ಕುಡಿದ ಅಮಲಿನಲ್ಲಿ ತನ್ನ ಪತ್ನಿ ಸುಮತಿಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದ. ಸುಟ್ಟಗಾಯಗಳಿಂದ ಸುಮತಿ ಮೃತಪಟ್ಟಿದ್ದಳು.&lt;/p&gt;&lt;p&gt;ಪತಿ ಜೈಲು ಸೇರಿದ್ದು ಈ ದಂಪತಿಗೆ ಇದ್ದ 6 ವರ್ಷ ಹಾಗು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದೀಗ ತಂದೆ ತಾಯಿ ಇಲ್ಲದೆ ತಬ್ಬಲಿಗಳಾಗಿದ್ದಾರೆ. ವಯಸ್ಸಾದ ಅಜ್ಜಿ ಅಂಕಮ್ಮನಿಗೆ ಈ ಎಳೆಯ ಮಕ್ಕಳನ್ನು ಸಾಕಬೇಕಾದ ಅನಿವಾರ್ಯತೆ ಎದುರಾಗಿದೆ. ತನ್ನ ಕಿವಿಯೋಲೆ, ಮೂಗೂತಿ ಅಡವಿಟ್ಟು ಸೊಸೆಯ ಅಂತ್ಯಸಂಸ್ಕಾರ ಹಾಗು ಹನ್ನೆರಡನೇ ದಿನದ ಕಾರ್ಯ ಮಾಡಿದ ಅಂಕಮ್ಮ ಈಗ ಮೊಮ್ಮಕ್ಕಳಿಬ್ಬರನ್ನು ಸಾಕಲು ಹೆಣಗಾಡುತ್ತಿದ್ದಾರೆ. . ತನಗೆ ಬರುವ 800 ರೂಪಾಯಿ ವಿಧವಾ ವೇತನದಲ್ಲೇ ಈ ಮಕ್ಕಳನ್ನು ಪೋಷಿಸಬೇಕಿದೆ.&lt;/p&gt;&lt;p&gt;ಈ ಮಕ್ಕಳ ಹೆಸರನ್ನು ಪಡಿತರ ಚೀಟಿಗೆ ಸೇರಿಸಲು ಈ ಮಕ್ಕಳ ಆಧಾರ್ ಕಾರ್ಡ್ ಬೇಕು. ಆದರೆ ಆಧಾರ್ ಕಾರ್ಡ್ ಮಾಡಿಸಲು ಕಚೇರಿಯಿಂದ ಕಚೇರಿ ಅಲೆದು ಸಾಕಾಗಿ ಹೋಗಿದ್ದಾರೆ. ಆಧಾರ್ ಕಾರ್ಡ್ ಮಾಡಿಸಲು ಸಹಾಯ ಮಾಡುವಂತೆ ಸಂತೇಮರಹಳ್ಳಿ ಪೊಲೀಸ್ ಠಾಣೆಗೆ ಹೋದರೆ ಅಲ್ಲಿನ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಈ ಮಕ್ಕಳನ್ನು ಯಾವುದಾದರೂ ಅನಾಥ ಶ್ರಮಕ್ಕೆ ಸೇರಿಸಿ ಕೂಲಿ ಮಾಡಿಕೊಂಡು ಇರು ಹೋಗು ಎಂಬ ಪುಕ್ಕಟೆ ಸಲಹೆ ಕೊಟ್ಟಿದ್ದಾರಂತೆ. ಈ ಮಾತುಗಳನ್ನು ಕೇಳುತ್ತಿದ್ದಂತೆ ಅಂಕಮ್ಮನ ಕರುಳು ಚುರುಕ್ ಎಂದಿದ್ಧು ಅಲ್ಲಿಂದ ಗಳಗಳನೆ ಅತ್ತುಕೊಂಡು ವಾಪಸ್ ಬಂದಿದ್ದಾರೆ..&lt;/p&gt;&lt;h2&gt;&lt;strong&gt;ನಿತ್ಯ ಪರದಾಟ&lt;/strong&gt;&lt;/h2&gt;&lt;p&gt;ಒಂದುವರೆ ವರ್ಷದ ಹೆಣ್ಣು ಮಗುವಂತು ಅಂಕಮ್ಮನ ಕೈ ಬಿಡುತ್ತಿಲ್ಲ. ಎಳೆಯ ವಯಸ್ಸಿನ ಮಕ್ಕಳನ್ನು ನೋಡಿಕೊಳ್ಳಬೇಕಾಗಿರೋದ್ರಿಂದ ಅಂಕಮ್ಮ ಕೂಲಿ ಕೆಲಸಕ್ಕೂ ಹೋಗಲಾಗುತ್ತಿಲ್ಲ. ಬೇರೆ ಆದಾಯದ ಮೂಲಗಳಿಲ್ಲದೆ ಈ ಎಳೆವಯಸ್ಸಿನ ಹೆಣ್ಣು ಮಕ್ಕಳ ಪಾಲನೆ ಪೋಷಣೆಗೆ ನಿತ್ಯ ಪರದಾಡುವಂತಾಗಿದೆ. ಅಧಿಕಾರಿಗಳು ಇದನ್ನೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಈ ಹೆಣ್ಞು ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿಕೊಟ್ಟಲ್ಲಿ ಪಡಿತರ ಚೀಟಿ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. ದಾನಿಗಳು ನೆರವಿನ ಹಸ್ತ ಚಾಚಿದರೆ ಈ ಕಂದಮ್ಮಗಳ ಮುಂದಿನ ಭವಿಷ್ಯಕ್ಕೆ ನೆರವಾಗಲಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chamarajanagar-orphan-children-aadhaar-card-help-needed-gvd/articleshow-m9hbdwg"/>
        </item>
        <item>
            <title><![CDATA[ವನ್ಯಪ್ರಾಣಿಗಳಿಗಲ್ಲ, ಕುಟುಂಬ ರಾಜಕಾರಣ ಮಾಡುವ ರಾಜಕಾರಣಿಗಳಿಗೆ ಸಂತಾನಹರಣ ಮಾಡಿ: ಸರ್ಕಾರಕ್ಕೆ ಭಾಗ್ಯರಾಜ್ ತಿರುಗೇಟು]]></title>
            <link>https://kannada.asianetnews.com/state/chamarajanagar-farmers-protest-bhagyaraj-slams-govt-on-wildlife-vasectomy-san/articleshow-oucndq7</link>
            <guid isPermaLink="true">https://kannada.asianetnews.com/state/chamarajanagar-farmers-protest-bhagyaraj-slams-govt-on-wildlife-vasectomy-san/articleshow-oucndq7</guid>
            <pubDate>Mon, 13 Apr 2026 12:33:52 +0530</pubDate>
            <description><![CDATA[&lt;p&gt;ಚಾಮರಾಜನಗರದಲ್ಲಿ, ಕಬ್ಬು ಬೆಳೆಗಾರರ ಸಂಘವು ವನ್ಯಪ್ರಾಣಿಗಳಿಗೆ ಸಂತಾನಹರಣ ಮಾಡುವ ಅರಣ್ಯ ಸಚಿವರ ಪ್ರಸ್ತಾವನೆ ಮತ್ತು ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪ್ರಯತ್ನಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp2t807kzpjefzbycfahprx1,imgname-chamarajanagar-farmers-protest-bhagyaraj-1776063611123.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.13): &lt;/strong&gt;ವನ್ಯಪ್ರಾಣಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಅರಣ್ಯ ಸಚಿವರ ಪ್ರಸ್ತಾವನೆ ಮತ್ತು ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ವಿರುದ್ಧ ಕಬ್ಬು ಬೆಳೆಗಾರರ ಸಂಘ ತೀವ್ರ ಆಕ್ರೋಶ ಹೊರಹಾಕಿದೆ. ಚಾಮರಾಜನಗರದ ಮರಿಯಾಲ ಮೇಲ್ಸೇತುವೆ ಬಳಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು-ಚಾಮರಾಜನಗರ ರಾಜ್ಯ ಹೆದ್ದಾರಿ ತಡೆದ ಪ್ರತಿಭಟನಾಕಾರರು, ಸರ್ಕಾರದ ವನ್ಯಜೀವಿ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.&lt;/p&gt;&lt;h2&gt;&lt;strong&gt;ಭಾಗ್ಯರಾಜ್ ಕಟು ಟೀಕೆ&lt;/strong&gt;&lt;/h2&gt;&lt;p&gt;ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜ್, ಸರ್ಕಾರ ಮತ್ತು ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು. &quot;ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಬೇಕಿರೋದು ಅಮಾಯಕ ವನ್ಯಪ್ರಾಣಿಗಳಿಗಲ್ಲ, ಬದಲಿಗೆ ಕುಟುಂಬ ರಾಜಕಾರಣ ಮಾಡುವವರಿಗೆ ಹಾಗೂ ಪಾರ್ಲಿಮೆಂಟ್ ಮತ್ತು ವಿಧಾನಸೌಧದೊಳಗೆ ಭ್ರಷ್ಟಾಚಾರ ನಡೆಸುತ್ತಿರುವ ರಾಜಕಾರಣಿಗಳಿಗೆ,&quot; ಎಂದು ಅವರು ಕಿಡಿಕಾರಿದರು. ವನ್ಯಜೀವಿಗಳಿಗೆ ಸಂತಾನಹರಣ ಮಾಡುವುದು ಅವಿವೇಕದ ಪರಮಾವಧಿ ಎಂದು ಅವರು ಅರಣ್ಯ ಸಚಿವರ ಹೇಳಿಕೆಯನ್ನು ಖಂಡಿಸಿದರು.&lt;/p&gt;&lt;h2&gt;&lt;strong&gt;ಪ್ರಿಯಾಂಕಾ ವಾದ್ರಾ ವಿರುದ್ಧ ಆಕ್ರೋಶ&lt;/strong&gt;&lt;/h2&gt;&lt;p&gt;ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲು ಪ್ರಿಯಾಂಕಾ ವಾದ್ರಾ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅವರ ವಿರುದ್ಧ ದಿಕ್ಕಾರ ಕೂಗಿದರು. &quot;ತಮ್ಮ ರಾಜಕೀಯ ಹಿತಾಸಕ್ತಿಗಾಗಿ ವನ್ಯಪ್ರಾಣಿಗಳನ್ನು ಬಲಿ ಕೊಡಲು ಪ್ರಿಯಾಂಕಾ ವಾದ್ರಾ ಮುಂದಾಗಿದ್ದಾರೆ&quot; ಎಂದು ಸಂಘದ ಕಾರ್ಯಕರ್ತರು ಆಪಾದಿಸಿದರು. ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನ ಕಾಪಾಡುವ ಬದಲು, ಸರ್ಕಾರ ಹಾದಿ ತಪ್ಪಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chamarajnagar</category>
            <dc:creator>Santosh Naik</dc:creator>
            <atom:link href="https://kannada.asianetnews.com/state/chamarajanagar-farmers-protest-bhagyaraj-slams-govt-on-wildlife-vasectomy-san/articleshow-oucndq7"/>
        </item>
        <item>
            <title><![CDATA[ಬಾಬಾ ಸಾಹೇಬರು ವಿಶ್ವ ಮೆಚ್ಚುವಂತಹ ಮಹಾನಾಯಕ: ನಟ ದುನಿಯಾ ವಿಜಯ್]]></title>
            <link>https://kannada.asianetnews.com/karnataka-districts/duniya-vijay-ambedkar-festival-hanur-speech-youth-values-gvd/articleshow-q759wog</link>
            <guid isPermaLink="true">https://kannada.asianetnews.com/karnataka-districts/duniya-vijay-ambedkar-festival-hanur-speech-youth-values-gvd/articleshow-q759wog</guid>
            <pubDate>Tue, 14 Apr 2026 17:47:18 +0530</pubDate>
            <description><![CDATA[&lt;p&gt;ಬಾಬಾ ಸಾಹೇಬರು ವಿಶ್ವ ಮೆಚ್ಚುವಂತಹ ಮಹಾನಾಯಕ. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆದಾಗ ಮಾತ್ರ ಇಂಥ ಕಾರ್ಯಕ್ರಮಗಳಿಗೆ ಅರ್ಥ ಸಿಗುತ್ತದೆ ಎಂದು ನಟ ದುನಿಯಾ ವಿಜಯ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp5ys1cdn92ca57krah3stc0,imgname-gcggc-1776169026956.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹನೂರು (ಏ.14): &lt;/strong&gt;ಬಾಬಾ ಸಾಹೇಬರು ವಿಶ್ವ ಮೆಚ್ಚುವಂತಹ ಮಹಾನಾಯಕ. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವು ನಡೆದಾಗ ಮಾತ್ರ ಇಂಥ ಕಾರ್ಯಕ್ರಮಗಳಿಗೆ ಅರ್ಥ ಸಿಗುತ್ತದೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಹನೂರಿನಲ್ಲಿ 3 ದಿನ ನಡೆಯುವ ಅಂಬೇಡ್ಕರ್&zwnj; ಹಬ್ಬದ ಮೊದಲ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.&lt;/p&gt;&lt;p&gt;ಅಂಬೇಡ್ಕರ್&zwnj; ಹೇಳಿದಂತೆ ತಾವು ಮತ ಚಲಾಯಿಸುವಾಗ ರಾಜಕಾರಣಿಗಳ ಬಳಿ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ, ನನ್ನ ಮತ ನನ್ನ ವೈಯಕ್ತಿಕವಾದಂತಹ ಇಚ್ಛೆ. ನನ್ನ ನಾಯಕನನ್ನು ಆಯ್ಕೆ ಮಾಡಿಕೊಳ್ಳುವುದು ನನ್ನ ಧರ್ಮ. ನಾನು ಯಾವುದೇ ಆಸೆಗಳಿಗೆ ಬಲಿಯಾಗದೆ ಮತ ಚಲಾಯಿಸುತ್ತೇನೆಂಬ ಪ್ರತಿಜ್ಞೆ ಮಾಡಿದಾಗ ಮಾತ್ರ ಇಂಥ ಕಾರ್ಯಕ್ರಮಗಳಿಗೆ ಮೌಲ್ಯ ಹೆಚ್ಚಾಗುತ್ತದೆ.&lt;/p&gt;&lt;h2&gt;&lt;strong&gt;ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು&lt;/strong&gt;&lt;/h2&gt;&lt;p&gt;ಜೊತೆಗೆ ಯುವಕರು ವಿದ್ಯಾರ್ಥಿಗಳು ಬಾಬಾ ಸಾಹೇಬರ ಪುಸ್ತಕಗಳನ್ನು ಹೆಚ್ಚು ಓದುವುದರಿಂದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಸಾಹಿತಿ ಹನೂರು ಚನ್ನಪ್ಪ ಮಾತನಾಡಿ, ದುನಿಯಾ ವಿಜಯ್ ಅವರು ಇತ್ತೀಚಿನ ದಿನಗಳಲ್ಲಿ ಬಾಬಾ ಸಾಹೇಬರ ಪುಸ್ತಕಗಳನ್ನು ಸುದೀರ್ಘವಾಗಿ ಅಧ್ಯಯನ ಮಾಡುವ ಮೂಲಕ ಅವರ ಮೌಲ್ಯಗಳನ್ನು ತಮ್ಮಲ್ಲಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದಾರೆ ಎಂದರು.&lt;/p&gt;&lt;p&gt;ಸಾಹಿತಿ ಹ ರಾ ಮಹೇಶ್ ಮಾತನಾಡಿ, ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ದೇಶದಲ್ಲಿ ಇನ್ನೂ ಜೀವಂತವಾಗಿದೆ. ಇದು ಬದಲಾವಣೆಯಾದರೆ ಮಾತ್ರ ಪ್ರಬುದ್ಧ ಭಾರತ ನಿರ್ಮಿಸಲು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ಮೈಸೂರು ಮಾಜಿ ಮೇಯರ್&zwnj; ಪುರುಷೋತ್ತಮ್, ಡಿವೈಎಸ್&zwnj;ಪಿ ಮಹಾನಂದ್, ತುಮಕೂರು ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಹನೂರು ಪಟ್ಟಣದ ಯಜಮಾನರು, ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯರು ಸೇರಿ ಹಲವರಿದ್ದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/duniya-vijay-ambedkar-festival-hanur-speech-youth-values-gvd/articleshow-q759wog"/>
        </item>
        <item>
            <title><![CDATA[ಸಂಬಂಧಿಕರ ಮನೆಯಿಂದ ಮರಳುವಾಗ ಮಹಿಳೆಗೆ ಮುಳುವಾದ ಸೀರೆ, ಕ್ಷಣಾರ್ಧದಲ್ಲೇ ಹೋಯ್ತು ಪ್ರಾಣ]]></title>
            <link>https://kannada.asianetnews.com/chamarajnagar/chamarajanagar-tragedy-woman-run-over-by-truck-after-saree-gets-caught-in-bike-wheel/articleshow-rpvqcea</link>
            <guid isPermaLink="true">https://kannada.asianetnews.com/chamarajnagar/chamarajanagar-tragedy-woman-run-over-by-truck-after-saree-gets-caught-in-bike-wheel/articleshow-rpvqcea</guid>
            <pubDate>Tue, 07 Apr 2026 22:37:59 +0530</pubDate>
            <description><![CDATA[&lt;p&gt;ಸಂಬಂಧಿಕರ ಮನೆಯಿಂದ ಮರಳುವಾಗ ಮಹಿಳೆಗೆ ಮುಳುವಾದ ಸೀರೆ, ಕ್ಷಣಾರ್ಧದಲ್ಲೇ ಹೋಯ್ತು ಪ್ರಾಣ, ಕಾರ್ಯಕ್ರಮ ಮುಗಿಸಿ ಸಂಭ್ರಮದಲ್ಲಿದ್ದ ಮಹಿಳೆಗೆ ಈಕೆಯ ಸೀರೆಯೇ ಪ್ರಾಣಕ್ಕೆ ಕುತ್ತು ತಂದಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knmdxsja3pbvpnnmp94agkcn,imgname-saree-1775580931656.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏ.07) &lt;/strong&gt;ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಪ್ರಮುಖವಾಗಿ ವಾಹನಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಅತೀವ ಕಾಳಜಿ ಅತ್ಯಗತ್ಯ. ಟ್ರಾಫಿಕ್ ನಿಯಮ ಪಾಲನೆ ಜೊತೆಗೆ ಕೆಲ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಬೇಕು. ಹೀಗೆ ಬೈಕ್&zwnj;ನಲ್ಲಿ ತೆರಳುತ್ತಿದ್ದಾಗ ಮಹಿಳೆಯ ಸೀರೆ ಸೆರಗು ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ಮಹಿಳೆ ರಸ್ತೆಗೆ ಬಿದ್ದಿದ್ದಾಳೆ. ಬೈಕ್ ಹಿಂದೆಯೇ ಇದ್ದ ಟ್ರಕ್ ಮಹಿಳೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ನಡೆದಿದೆ.&lt;/p&gt;&lt;p&gt;ಮೃತ ಮಹಿಳೆಯನ್ನು ಶಿವಮ್ಮ ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ತೆರಳಿ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಶಿವಮ್ಮ ತನ್ನ ಸೀರೆ ಸೆರಗಿನ ಕುರಿತು ಹೆಚ್ಚಿನ ಗಮನ ಕೊಟ್ಟಿಲ್ಲ. ಇತ್ತ ಬೈಕ್ ರೈಡ್ ಮಾಡುತ್ತಿದ್ದ ವ್ಯಕ್ತಿ ಕೂಡ ಗಮನಿಸಲಿಲ್ಲ. ಪರಿಣಾಮ ದುರಂತ ನಡೆದು ಹೋಗಿದೆ. ಸೀರೆ ಸೆರೆಗು ಚಕ್ರಕ್ಕೆ ಸಿಲುಕಿದ ಪರಿಣಾಮ ಶಿವಮ್ಮ ಚಲಿಸುತ್ತಿದ್ದ ಬೈಕ್&zwnj;ನಿಂದ ರಸ್ತೆ ಮೇಲೆ ಬಿದ್ದಿದ್ದಾರೆ. ಕ್ಷಣಾರ್ಧದಲ್ಲಿ ಟ್ರಕ್ ಹರಿದಿದಿದೆ. ಬೋಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h2&gt;ಟಿಪ್ಪರ್ ಕಾರು ನಡುವೆ ಡಿಕ್ಕಿ&lt;/h2&gt;&lt;p&gt;ಇಂದು ಬೆಳಗ್ಗೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಂಗಳ ಮಾರ್ಗದ ಬಸವಪುರ ಬಳಿ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಕಾರು ಜಖಂಗೊಂಡಿತ್ತು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಲೋಡ್ ಹೊತ್ತು ತಮಿಳುನಾಡಿನತ್ತ ಸಾಗುತ್ತಿದ್ದ ಟಿಪ್ಪರ್&zwnj;ಗೆ ವಿರುದ್ದ ದಿಕ್ಕಿನಲ್ಲಿ ಕಾರು ಬಂದು ಅಪಘಾತ ಸಂಭವಿಸಿತ್ತು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.&lt;/p&gt;&lt;h2&gt;ಸ್ಥಳದಲ್ಲೇ ತಂದೆ ಮಗಳ ದುರ್ಮರಣ&lt;/h2&gt;&lt;p&gt;ಕಲಬುರಗಿ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ತಂದೆ ಹಾಗೂ ಮಗಳು ಮೃತಪಟ್ಟಿದ್ದಾರೆ. ತಂದೆ ಹಾಗೂ ಮಗಳು ಸಂಚರಿಸುತ್ತಿದ್ದ ಬೈಕ್&zwnj;ಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ನಡೆದಿದೆ. ಅಪಘಾತದಲ್ಲಿ ತಂದೆ ರಾಜುಕುಮಾರ್ (45) ಮಗಳು ಸುಮಾ (14) ಸ್ಥಳದಲ್ಲೆ ಸಾವು ಕಂಡಿದ್ದಾರೆ. ಬೈಕ್ ಮೇಲೆ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬೈಕ್&zwnj;ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ ಹೊಡೆದು ಸ್ಥಳದಲ್ಲಿ ಸಾವು ಕಂಡಿದ್ದಾರೆ. ಮೃತರು ನಗರದ ರಾಣೋಜಪೀರ ದರ್ಗಾ ಪ್ರದೇಶದ ನಿವಾಸಿಗಳಾಗಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chamarajnagar</category>
            <dc:creator>Chethan Kumar</dc:creator>
            <atom:link href="https://kannada.asianetnews.com/chamarajnagar/chamarajanagar-tragedy-woman-run-over-by-truck-after-saree-gets-caught-in-bike-wheel/articleshow-rpvqcea"/>
        </item>
        <item>
            <title><![CDATA[ಕೆರೆಗಳಿಗೆ ನೀರು ತುಂಬಿಸುವ ಕೀರ್ತಿ ಶಾಸಕ ಗಣೇಶ್‌ ಪ್ರಸಾದ್‌ಗೆ ಸಲ್ಲಲಿ: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils</link>
            <guid isPermaLink="true">https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils</guid>
            <pubDate>Wed, 22 Apr 2026 21:22:56 +0530</pubDate>
            <description><![CDATA[&lt;p&gt;ಗುಂಡ್ಲುಪೇಟೆ ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಂಡ್ಲುಪೇಟೆ (ಏ.22):&lt;/strong&gt; ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj;ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.&lt;/p&gt;&lt;p&gt;ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬಂಧ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ನನಗೆ ಹಾಗೂ ಡಿಸಿಎಂಗೆ ಮನವಿ ಮಾಡಿದ್ದರು ಎಂದರು. ಗಣೇಶ್&zwnj; ಪ್ರಸಾದ್&zwnj; ಮೂರು ವರ್ಷದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಒಬ್ಬ ಉತ್ತಮ ಶಾಸಕ ಎಂದು ಹೆಸರು ಪಡೆದಿದ್ದಾರೆ, ಮಹದೇವ ಪ್ರಸಾದ್&zwnj; ಅವರ ರೀತಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;&lt;p&gt;ಶಾಸಕ ಗಣೇಶ್&zwnj; ಪ್ರಸಾದ್&zwnj; ಅಭಿವೃದ್ಧಿ ಕೆಲಸ ತರಲು ಉತ್ಸಾಹಿಯಾಗಿದ್ದಾರೆ. ನಮ್ಮ ಸರ್ಕಾರ ಕೂಡ ನಿಮ್ಮ ಉತ್ಸಾಹಕ್ಕೆ ಪ್ರೋತ್ಸಾಹಿಸುತ್ತದೆ ಹಾಗೂ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.ಬೇರೆ ಮಾತನಾಡಲ್ಲ: ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ನನ್ನ ಭೇಟಿಯಾದಾಗಲೆಲ್ಲ ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಮಾತನಾಡುತ್ತಾರೆ. ಕ್ಷೇತ್ರದ ಜನರ ಆಶೀರ್ವಾದ ಸದಾ ಗಣೇಶ್&zwnj; ಪ್ರಸಾದ್&zwnj; ಮೇಲೆ ಇರಲಿ ಎಂದರು.&lt;/p&gt;&lt;h2&gt;&lt;strong&gt;ಕಾರ್ಯಕರ್ತರ ಗದರಿದ ಸಿಎಂ!&lt;/strong&gt;&lt;/h2&gt;&lt;p&gt;ಪಟ್ಟಣದಲ್ಲಿ ನಡೆದ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಲು ಬಂದಾಗ, ಕೆಲ ಕಾರ್ಯಕರ್ತರು ವೇದಿಕೆಯಿಂದ ನಿರ್ಗಮಿಸುತ್ತಿದ್ದದ್ದನ್ನು ಕಂಡ ಮುಖ್ಯಮಂತ್ರಿಗಳು ಕಾರ್ಯಕರ್ತರನ್ನು ಗದರಿ ಕೂರಿಸಿದ ಘಟನೆ ನಡೆಯಿತು. ನಾವೇನು ತಮಾಷೆಗೆ ಬಂದಿದ್ದೀವಾ? ಶಾಸಕ ಗಣೇಶ್&zwnj; ಪ್ರಸಾದ್&zwnj; ಸಮಾರಂಭ ಆಯೋಜಿಸಿದ್ದಾರೆ. ಸಮಾರಂಭಕ್ಕೆ ಬಂದ್ಮೇಲೆ ನಮ್ಮ ಮಾತು ಕೇಳಬೇಕು ಎಂದರಲ್ಲದೆ, ಕಾಂಗ್ರೆಸ್&zwnj; ಕಾರ್ಯಕರ್ತರು ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದು ಸೂಚಿಸಿದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils"/>
        </item>
        <item>
            <title><![CDATA[ಬಲಗೈಗೆ ಅನ್ಯಾಯವಾದರೆ ಅಧಿಕಾರ ತ್ಯಾಗಕ್ಕೆ ಸಿದ್ಧ: ಸಚಿವ ಎಚ್.ಸಿ.ಮಹದೇವಪ್ಪ]]></title>
            <link>https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr</link>
            <guid isPermaLink="true">https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr</guid>
            <pubDate>Tue, 28 Apr 2026 00:25:05 +0530</pubDate>
            <description><![CDATA[&lt;p&gt;ನನ್ನ 40 ವಷರ್ಗಳ ರಾಜಕಾರಣದಲ್ಲಿ ದಲಿತ ಸಮಾಜದ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಅಂತಹ ಸಮಾಜಕ್ಕೆ ನಾನು ಇರುವ ತನಕ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4rn1zecz4c158wq4pqmxteg,imgname-hc-mahadevappa-1757469015500.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಳ್ಳೇಗಾಲ (ಏ.28): &lt;/strong&gt;ನನ್ನ 40 ವಷರ್ಗಳ ರಾಜಕಾರಣದಲ್ಲಿ ದಲಿತ ಸಮಾಜದ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಅಂತಹ ಸಮಾಜಕ್ಕೆ ನಾನು ಇರುವ ತನಕ ಅನ್ಯಾಯವಾಗಲು ಬಿಡುವುದಿಲ್ಲ. ಒಂದು ವೇಳೆ ಅನ್ಯಾಯವಾದರೆ ನಾನು ಅಧಿಕಾರ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್&zwnj; ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.&lt;/p&gt;&lt;p&gt;ದಲಿತ ಸಮಾಜ ಕ್ಷುಲ್ಲಕ ವಿಚಾರಗಳಿಗಾಗಿ ಗುಂಪು, ಗುಂಪುಗಳಾದರೆ ಶಾಶ್ವತವಾಗಿ ವಿಭಜನೆಯಾಗುತ್ತೀರಿ. ಇದನ್ನರಿತು ಮುಂದೆ ಸಾಗಬೇಕು. ಇತ್ತೀಚಿನ ದಿನಗಳಲ್ಲಿ ಮತೀಯ ಶಕ್ತಿಗಳು, ಕೋಮುವಾದಿಗಳು ಸಂವಿಧಾನದ ಮೇಲೆ ಸವಾರಿ ಮಾಡುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ. ನಾನು ಸಮಾಜ ಕಲ್ಯಾಣ ಸಚಿವನಾದ ಬಳಿಕ ಸಂಪುಟ ಸಭೆಯಲ್ಲಿ ಸಂವಿಧಾನ ಪೀಠಿಕೆ ಓದಬೇಕೆಂಬ ನಿರ್ಣಯ ಪ್ರಕಟಿಸಿದ ಬಳಿಕ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ಸಂವಿಧಾನದ ಕೆಂಪು ಪುಸ್ತಕ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.&lt;/p&gt;&lt;p&gt;ಪ್ರಧಾನಮಂತ್ರಿಗಳು, ಸ್ವಾಮೀಜಿಗಳು ಸಹ ಸಂವಿಧಾನಕ್ಕೆ ನಮಿಸುವಂತಾಗಿದೆ ಎಂದರು. ಅಂಬೇಡ್ಕರ್&zwnj; ಅವರು ಸರ್ವಾಧಿಕಾರಿ ಧೋರಣೆ ಸಹಿಸುತ್ತಿರಲಿಲ್ಲ. ಪೋಟೊ ಪೂಜೆ ವಿರೋಧಿಸುತ್ತಿದ್ದರು. ನಮ್ಮ ದೇಶಕ್ಕೆ ಪ್ರಜಾಪ್ರಭುತ್ವ ಬೇಕು ಎಂಬುದನ್ನು ನಿರ್ಧರಿಸಿ ಮಹಾನ್ ಪವಿತ್ರ ಗ್ರಂಥವನ್ನು ದೇಶಕ್ಕೆ ಕೊಡುಗೆ ನೀಡಿದರು. ತುಳಿತಕ್ಕೊಳಗಾದವರ ಮೇಲೆತ್ತಿದ್ದ ಕೀರ್ತಿ ಬಾಬಾ ಸಾಹೇಬರದ್ದು. ಇಂದು ನಾವೆಲ್ಲರೂ ಅಂಬೇಡ್ಕರ್&zwnj; ವಾದಿಗಳ ಬಗ್ಗೆ ಜಾಗೃತಿ ವಹಿಸುವ ಅಗತ್ಯವಿದೆ ಎಂದರು.&lt;/p&gt;&lt;h2&gt;&lt;strong&gt;ಸಂವಿಧಾನ ಕೊಡುಗೆ&lt;/strong&gt;&lt;/h2&gt;&lt;p&gt;ಬಾಬಾ ಸಾಹೇಬರ ಚರಿತ್ರೆ ಓದಿದರೆ ಅವರು ದೇಶ ಪ್ರೇಮದ ಪ್ರತೀಕ ಎಂಬುದು ವೇದ್ಯವಾಗಲಿದೆ. ಅವರು ಯಾರನ್ನು ದ್ವೇಷಿಸಿಲ್ಲ, ವಿರೋಧಿಸಿಯೂ ಇಲ್ಲ. ಸೇಡಿನ ಮನೋಭಾವ ಇರಲಿಲ್ಲ. ಭಾರತ ವೈವಿಧ್ಯತೆಯಲ್ಲಿ ಏಕತೆಯ ದೇಶ ಎಂಬುದನ್ನು ಮನಗಂಡು ಸಂವಿಧಾನ ಕೊಡುಗೆ ನೀಡಿದ್ದಾರೆ. ಅದನ್ನು ಸಂರಕ್ಷಿಸುವ ಗುರುತರ ಹೊಣೆ ನಾವೆಲ್ಲರೂ ಅರಿಯಬೇಕು ಎಂದರು.&lt;/p&gt;&lt;p&gt;ಈ ಸಂದರ್ಭದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿ ಪದಕ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸ್ ಆಯುಕ್ತ ಎಚ್.ಕೆ. ಮಹಾನಂದ, ವೈದ್ಯಕೀಯ ಪ್ರವೇಶ ಪಡೆದ 6 ವಿದ್ಯಾರ್ಥಿಗಳು, ಪಿಯುಸಿ ಮತ್ತು ಎಸ್&zwnj;ಎಸ್&zwnj;ಎಲ್&zwnj;ಸಿ ಮಕ್ಕಳು, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಮಕ್ಕಳು, ಸರ್ಕಾರಿ ನೌಕರರಿಗೆ ಅಭಿನಂದಿಸಲಾಯಿತು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr"/>
        </item>
        <item>
            <title><![CDATA[ಚಾಮರಾಜನಗರದ ಚತುರ ಸವಾರ! ಹೆಲ್ಮೆಟ್ ಬದಲು 'ಸೊಪ್ಪು' ಹೊತ್ತು ಸವಾರಿ; ಬಿಸಿಲಿಗೇನೋ ಓಕೆ, ಬಿದ್ರೆ ಗತಿ ಏನು ಸಾಮಿ?]]></title>
            <link>https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk</link>
            <guid isPermaLink="true">https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk</guid>
            <pubDate>Wed, 22 Apr 2026 19:32:52 +0530</pubDate>
            <description><![CDATA[&lt;p&gt;ಚಾಮರಾಜನಗರದಲ್ಲಿ ಬೈಕ್ ಸವಾರನೊಬ್ಬ ಬೇಸಿಗೆಯ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹೆಲ್ಮೆಟ್ ಬದಲಿಗೆ ತಲೆಯ ಮೇಲೆ ಸೊಪ್ಪನ್ನು ಇಟ್ಟುಕೊಂಡು ಸವಾರಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ತಮಾಷೆಯ ಘಟನೆಯು ನೋಡಲು ನಗು ತರಿಸಿದರೂ, ಅಪಘಾತದ ಸಮಯದಲ್ಲಿ ಹೆಲ್ಮೆಟ್&zwnj; ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kptqs2ed3pfrmzfd7b65t1k5,imgname-chamarajanagar-green-helmet-1776866331084.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೇಸಿಗೆಯ ಬಿಸಿಲು ಮನುಷ್ಯನನ್ನು ಏನೆಲ್ಲಾ ಮಾಡಿಸುತ್ತದೆ ಎಂಬುದಕ್ಕೆ ಗಡಿ ಜಿಲ್ಲೆ ಚಾಮರಾಜನಗರದ ಈ ಘಟನೆಯೇ ಸಾಕ್ಷಿ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದ್ದು, ಅದನ್ನು ನೋಡಿದವರು 'ಇವನೊಬ್ಬನೇ ನೋಡಿ ನಿಜವಾದ ಪ್ರಕೃತಿ ಪ್ರೇಮಿ' ಎಂದು ನಗುತ್ತಿದ್ದಾರೆ. ಹೌದು, ಬೈಕ್ ಸವಾರನೊಬ್ಬ ಹೆಲ್ಮೆಟ್ ಬದಲಿಗೆ ತಲೆಯ ಮೇಲೆ ಹಚ್ಚಹಸಿರಾದ ಸೊಪ್ಪನ್ನು (ಗಿಡದ ಟೊಂಗೆಗಳನ್ನು) ಇಟ್ಟುಕೊಂಡು ಸವಾರಿ ಮಾಡಿದ್ದಾನೆ!&lt;/p&gt;&lt;h3&gt;&lt;strong&gt;ಸಂತೇಮರಹಳ್ಳಿ ಸರ್ಕಲ್&zwnj;ನಲ್ಲಿ ಕಂಡ 'ನೈಸರ್ಗಿಕ ಎಸಿ'!&lt;/strong&gt;&lt;/h3&gt;&lt;p&gt;ಚಾಮರಾಜನಗರದ ಸಂತೇಮರಹಳ್ಳಿ ಸರ್ಕಲ್ ಬಳಿ ಈ ದೃಶ್ಯ ಕಂಡುಬಂದಿದೆ. ಜಿಲ್ಲೆಯಲ್ಲಿ ಸೂರ್ಯದೇವ ತನ್ನ ಪ್ರತಾಪ ತೋರುತ್ತಿದ್ದು, ರಸ್ತೆಗಿಳಿಯುವ ಸವಾರರು ಬಿಸಿಲ ಝಳಕ್ಕೆ ಹೈರಾಣಾಗುತ್ತಿದ್ದಾರೆ. ಸಾಮಾನ್ಯವಾಗಿ ಜನ ಟವೆಲ್ ಸುತ್ತಿಕೊಳ್ಳುತ್ತಾರೆ ಅಥವಾ ಕ್ಯಾಪ್ ಹಾಕಿಕೊಳ್ಳುತ್ತಾರೆ. ಆದರೆ ಈ ಮಹಾನುಭಾವ ಒಂದು ಹೆಜ್ಜೆ ಮುಂದೆ ಹೋಗಿ, ರಸ್ತೆ ಬದಿಯ ಗಿಡದಿಂದ ಒಂದಿಷ್ಟು ಸೊಪ್ಪನ್ನು ಕೊಯ್ದು ತಲೆಯ ಮೇಲೆ ಇಟ್ಟುಕೊಂಡು, ಅದರ ಮೇಲೆ ಟೋಪಿ ಧರಿಸಿದ್ದಾನೆ. ನೋಡಲು ಇದು ತಲೆಯ ಮೇಲೆ ಸಣ್ಣದೊಂದು 'ಮೊಬೈಲ್ ಗಾರ್ಡನ್' ಇದ್ದಂತೆ ಕಾಣುತ್ತಿದೆ!&lt;/p&gt;&lt;h2&gt;&lt;strong&gt;ಹಾಸ್ಯದ ಹಿಂದೆ ಇರಲಿ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಈ ವಿಡಿಯೋ ನೋಡಲು ಎಷ್ಟು ತಮಾಷೆಯಾಗಿದೆಯೋ, ಅಷ್ಟೇ ಆತಂಕಕಾರಿಯೂ ಆಗಿದೆ. ಸವಾರ ಕಂಡುಕೊಂಡ ಈ 'ನೈಸರ್ಗಿಕ ಕೂಲಿಂಗ್ ವ್ಯವಸ್ಥೆ' ಬಿಸಿಲಿನಿಂದ ತಲೆಯನ್ನು ತಂಪಾಗಿಡಬಹುದು ನಿಜ. ಆದರೆ, ಒಂದು ವೇಳೆ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆದರೆ ಈ 'ಸೊಪ್ಪು' ತಲೆಯನ್ನು ಕಾಪಾಡಬಲ್ಲದೇ? ಎಂಬ ಪ್ರಶ್ನೆ ಮೂಡಿದೆ. ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಕಡ್ಡಾಯ ಮಾಡಿರುವುದು ಬಿಸಿಲಿನಿಂದ ರಕ್ಷಣೆ ಪಡೆಯುವುದಕ್ಕಲ್ಲ, ಬದಲಾಗಿ ಅಪಘಾತವಾದಾಗ ಜೀವ ಉಳಿಸಲಿ ಎಂಬ ಉದ್ದೇಶದಿಂದ.&lt;/p&gt;&lt;h3&gt;&lt;strong&gt;ಸವಾರರಿಗೆ ಕಿವಿಮಾತು:&lt;/strong&gt;&lt;/h3&gt;&lt;p&gt;ಬಿಸಿಲಿನಿಂದ ರಕ್ಷಣೆ ಪಡೆಯಲು ನೀವು ತಲೆ ಮೇಲೆ ಸೊಪ್ಪು ಇಟ್ಟುಕೊಳ್ಳಿ ಅಥವಾ ಐಸ್ ಗಟ್ಟಿ ಇಟ್ಟುಕೊಳ್ಳಿ, ಅದು ನಿಮ್ಮ ವೈಯಕ್ತಿಕ ವಿಚಾರ. ಆದರೆ, ಅದರ ಮೇಲೆ ಐಎಸ್&zwnj;ಐ (ISI) ಮುದ್ರೆ ಇರುವ ಗಟ್ಟಿಮುಟ್ಟಾದ ಹೆಲ್ಮೆಟ್ ಇರುವುದು ಬಹಳ ಮುಖ್ಯ. ಈ 'ಸೊಪ್ಪು ಸವಾರ'ನ ವಿಡಿಯೋ ನೋಡಿ ನಕ್ಕು ಸುಮ್ಮನಾಗಬೇಡಿ. ನೀವು ಹೊರಗೆ ಹೋಗುವಾಗ ಬಿಸಿಲಿಗೆ 'ಛತ್ರಿ' ಜೊತೆಗೆ ಜೀವಕ್ಕೆ 'ಹೆಲ್ಮೆಟ್' ಎಂಬ ಕವಚವನ್ನೂ ಮರೆಯಬೇಡಿ.&lt;/p&gt;&lt;p&gt;ಒಟ್ಟಿನಲ್ಲಿ ಚಾಮರಾಜನಗರದ ಈ 'ನಿಸರ್ಗ ಪ್ರೇಮಿ' ಸವಾರ ಈಗ ಇಂಟರ್ನೆಟ್ ಸೆನ್ಸೇಷನ್ ಆಗಿಬಿಟ್ಟಿದ್ದಾನೆ. ಪೊಲೀಸರ ಕಣ್ಣಿಗೆ ಈ 'ಗ್ರೀನ್ ಹೆಲ್ಮೆಟ್' ಬಿದ್ದರೆ ದಂಡ ಗ್ಯಾರಂಟಿ. ಹಾಗಾಗಿ, ಸಾರ್ವಜನಿಕರೇ, ಬಿಸಿಲಿಗಾಗಿ ಮಾಡುವ ಕಸರತ್ತುಗಳು ನಿಮ್ಮ ಜೀವಕ್ಕೆ ಕಂಟಕವಾಗದಂತೆ ನೋಡಿಕೊಳ್ಳಿ!&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk"/>
        </item>
        <item>
            <title><![CDATA[ಗಂಡಸರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿದ KSRTC ಕಂಡಕ್ಟರ್; ಎಡವಟ್ಟೋ? ಹಣ ಮಾಡುವ ದಂಧೆಯೋ?]]></title>
            <link>https://kannada.asianetnews.com/karnataka-districts/chamarajanagar-ksrtc-conductor-cheats-male-passenger-by-giving-shakti-yojana-ticket-rav/articleshow-un1en7i</link>
            <guid isPermaLink="true">https://kannada.asianetnews.com/karnataka-districts/chamarajanagar-ksrtc-conductor-cheats-male-passenger-by-giving-shakti-yojana-ticket-rav/articleshow-un1en7i</guid>
            <pubDate>Thu, 09 Apr 2026 10:14:45 +0530</pubDate>
            <description><![CDATA[&lt;p&gt;ಚಾಮರಾಜನಗರದಲ್ಲಿ ಕೆಎಸ್ಆರ್ ಟಿಸಿ ಕಂಡಕ್ಟರ್ ಒಬ್ಬರು ಪುರುಷ ಪ್ರಯಾಣಿಕರಿಂದ ಹಣ ಪಡೆದು, ಮಹಿಳೆಯರಿಗೆ ಮೀಸಲಾದ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡಿರುವ ಘಟನೆ ನಡೆದಿದೆ. ಈ ರೀತಿಯ ಅಕ್ರಮ ರಾಜ್ಯದ ಇತರೆಡೆಗೂ ವ್ಯಾಪಿಸಿದ್ದು, ಕಂಡಕ್ಟರ್&zwnj;ಗಳು ಹಣ ಜೇಬಿಗಿಳಿಸಿಕೊಳ್ಳುತ್ತಿದ್ದಾರೆ ಎಂದು ಪ್ರಯಾಣಿಕರು ಆರೋಪ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knr8n27rccqbd5xwwa1t7326,imgname-----------------------2026-04-09t095521.367-1775709620472.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಏಪ್ರಿಲ್ 9):&lt;/strong&gt; ಮಹಿಳೆಯರು ಸರ್ಕಾರಿ ಬಸ್&zwnj;ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅನುಕೂಲ ಕಲ್ಪಿಸಲು ಜಾರಿಗೆ ಬಂದ ಶಕ್ತಿ ಯೋಜನೆ ಈಗ ಪುರುಷರಿಗೂ ವಿಸ್ತರಣೆಯಾಗಿದೆಯೇ ಎಂಬ ಅನುಮಾನ ಮೂಡುವಂತಹ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ. ಕೆಎಸ್ಆರ್ ಟಿಸಿ ಕಂಡಕ್ಟರ್ ಒಬ್ಬರು ಪುರುಷ ಪ್ರಯಾಣಿಕರಿಗೆ ಮಹಿಳೆಯರ ಉಚಿತ ಟಿಕೆಟ್ ನೀಡಿರುವ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಚಾಮರಾಜನಗರದಿಂದ ಮಾದಾಪುರ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಂದ 10 ರೂಪಾಯಿ ಹಣ ಪಡೆದ ಕಂಡಕ್ಟರ್, ಅವರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡಿದ್ದಾರೆ. ನಿಗದಿತ ಸ್ಟಾಪ್ ಇಲ್ಲ ಎಂದು ಸಬೂಬು ಹೇಳಿ ಈ ರೀತಿ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.&lt;/p&gt;&lt;h2&gt;ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ ದಂಧೆ&lt;/h2&gt;&lt;p&gt;ಈ ಅಕ್ರಮ ಕೇವಲ ಇಲ್ಲಿಗೆ ಸೀಮಿತವಾಗಿಲ್ಲ. ಬೆಂಗಳೂರಿನ ಬಿಎಂಟಿಸಿ ಬಸ್ಸುಗಳಲ್ಲಿಯೂ ಇಂತಹ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪಗಳಿವೆ. ಸಮೀಪದ ನಿಲ್ದಾಣಗಳಿಗೆ ಇಳಿಯುವವರು, ಹಳ್ಳಿಗಳಿಂದ ಬಂದ ಮುಗ್ಧರು ಅಥವಾ ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ಕಂಡಕ್ಟರ್ ಗಳು ಅವರಿಗೆ ಉಚಿತ ಟಿಕೆಟ್ ನೀಡಿ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳುತ್ತಿದ್ದಾರೆ.&lt;/p&gt;&lt;p&gt;ದಿನನಿತ್ಯ ಶಕ್ತಿ ಯೋಜನೆಯ ಟಿಕೆಟ್ ಗಳನ್ನು ಗಂಡಸರಿಗೆ ಕೊಡುವ ಮೂಲಕ ಕಂಡಕ್ಟರ್&zwnj;ಗಳು ಸಾವಿರಾರು ರೂಪಾಯಿ ಜೇಬಿಗಿಳಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಕಂಡಕ್ಟರ್ ಗಳು ವಿಕಾರವಾಗಿ ನಕ್ಕು ಏನೋ ಒಂದು ಸುಳ್ಳು ಕಾರಣ ಹೇಳಿ ನುಣುಚಿಕೊಳ್ಳುತ್ತಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.&lt;/p&gt;&lt;p&gt;ಚಾಮರಾಜನಗರದಲ್ಲಿ ನಡೆದಿರುವ ಈ ವಂಚನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು, ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಗರಣದ ವಿರುದ್ಧ ಕೂಡಲೇ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ (ಡಿಸಿ) ದೂರು ನೀಡಲು ಪ್ರಯಾಣಿಕ ನಿರ್ಧರಿಸಿರುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/chamarajanagar-ksrtc-conductor-cheats-male-passenger-by-giving-shakti-yojana-ticket-rav/articleshow-un1en7i"/>
        </item>
        <item>
            <title><![CDATA[ನಮ್ಮ ಗ್ರಾಮಕ್ಕೆ  79 ವರ್ಷಗಳಿಂದ ಕರೆಂಟು ಇಲ್ಲ!  ವಿದ್ಯುತ್ ಕೊಡದಿದ್ದರೆ ದಯಾಮರಣ ಕೊಡಿ, ಬೇಸತ್ತ ವೃದ್ಧೆಯಿಂದ ಸಿಎಂ ಪತ್ರ]]></title>
            <link>https://kannada.asianetnews.com/karnataka-districts/give-electricity-or-grant-euthanasia-elderly-woman-from-chamarajanagar-writes-to-cm-of-karnataka-rav/articleshow-wtxlrrn</link>
            <guid isPermaLink="true">https://kannada.asianetnews.com/karnataka-districts/give-electricity-or-grant-euthanasia-elderly-woman-from-chamarajanagar-writes-to-cm-of-karnataka-rav/articleshow-wtxlrrn</guid>
            <pubDate>Fri, 17 Apr 2026 06:01:41 +0530</pubDate>
            <description><![CDATA[&lt;p&gt;ಹನೂರು ತಾಲೂಕಿನ ಮೆದಗಾಣೆ ಗ್ರಾಮದ ಕೆಂಪಮ್ಮ ಎಂಬ ವೃದ್ಧೆ, 79 ವರ್ಷಗಳಿಂದ ತಮ್ಮೂರಿಗೆ ವಿದ್ಯುತ್, ರಸ್ತೆ, ನೀರಿನಂತಹ ಮೂಲಸೌಕರ್ಯಗಳಿಲ್ಲದ ಕಾರಣ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಗ್ರಾಮಕ್ಕೆ ವಿದ್ಯುತ್&zwnj; ಸಂಪರ್ಕ ಕಲ್ಪಿಸಿ, ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpcd4vpxrbj39zcgx1r3rw2d,imgname-----------------------2026-04-17t055121.700-1776385421021.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹನೂರು (ಏ.17): &lt;/strong&gt;ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ನಮಗೆ ಇನ್ನು ವಿದ್ಯುತ್&zwnj; ಸಂಪರ್ಕ ಸಿಕ್ಕಿಲ್ಲ. ನಮ್ಮ ಮೊಮ್ಮಕ್ಕಳು ವಿದ್ಯುತ್&zwnj; ಇಲ್ಲದೇ ಪಡಿಪಾಟಲು ಅನುಭವಿಸುತ್ತಿದ್ದು, ನಮ್ಮ ಕಣ್ಣಲ್ಲಿ ನೋಡಲಾಗುತ್ತಿಲ್ಲ. ದಯವಿಟ್ಟು ವಿದ್ಯುತ್&zwnj; ಸಂಪರ್ಕ ಕಲ್ಪಿಸಿ, ಇಲ್ಲವೇ ದಯಾಮರಣಕ್ಕೆ ಅನುಮತಿ ಕೊಡಿ ಎಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೆದಗಾಣೆ ಗ್ರಾಮದ ಮಹಿಳೆಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.&lt;/p&gt;&lt;p&gt;ಕೆಂಪಮ್ಮ (60) ಪತ್ರ ಬರೆದಿದ್ದು, ಶೀಘ್ರದಲ್ಲಿ ಅಂಚೆ ಮೂಲಕ ಕಳುಹಿಸಲಿದ್ದಾರೆ. ತಮ್ಮ ಪತ್ರದಲ್ಲಿ ಮೆದಗಾಣೆ ಹಾಡಿಯ ಕೆಂಪಮ್ಮ 3 ತಲೆಮಾರುಗಳಿಂದ ಗ್ರಾಮದಲ್ಲಿಯೇ ವಾಸವಿದ್ದು, ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ನಮ್ಮ ಗ್ರಾಮಕ್ಕೆ ರಸ್ತೆ, ಕುಡಿಯುವ ನೀರು, ವಿದ್ಯುತ್&zwnj; ಸಂಪರ್ಕ ಲಭಿಸಿಲ್ಲ. ಅಧಿಕಾರಿಗಳು ತಾರತಮ್ಯ ಮತ್ತು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.&lt;/p&gt;&lt;p&gt;ಏ.10ರಂದು ಆದಿವಾಸಿ ಹಿತರಕ್ಷಣಾ ಸಮಿತಿ ಬೆಂಬಲದೊಂದಿಗೆ 6 ದಿನ ಉಪವಾಸದಲ್ಲಿಯೂ ಭಾಗವಹಿಸಿ ಪ್ರತಿಭಟನೆ ನಡೆಸಿದರೂ, ಜಿಲ್ಲಾಡಳಿತ ಗಮನಹರಿಸಿಲ್ಲ. ಕಣ್ಣಿನ ದೃಷ್ಟಿ ಕಡಿಮೆಯಾಗಿ ರಾತ್ರಿ ಶೌಚಾಲಯಕ್ಕೆ ಹೋಗಲು ಸಮಸ್ಯೆಯಾಗಿದೆ. ನಾವು ಪ್ರಾಣಿಗಳ ರೀತಿ ಬದುಕುತ್ತಿದ್ದೇವೆ ಎಂದು ಅಲವತ್ತುಕೊಂಡಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/give-electricity-or-grant-euthanasia-elderly-woman-from-chamarajanagar-writes-to-cm-of-karnataka-rav/articleshow-wtxlrrn"/>
        </item>
        <item>
            <title><![CDATA[ಚಾಮರಾಜನಗರ ಜಿಲ್ಲಾಸ್ಪತ್ರೆ ಆಮ್ಲಜನಕ ದುರಂತದ  ಸಂತ್ರಸ್ತರಿಗೆ ಅದೇ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ನೀಡಿದ ಸಿಎಂ]]></title>
            <link>https://kannada.asianetnews.com/state/chamarajanagar-oxygen-tragedy-karnataka-govt-gives-jobs-to-25-victims-members-same-hospital-rav/articleshow-ygn625y</link>
            <guid isPermaLink="true">https://kannada.asianetnews.com/state/chamarajanagar-oxygen-tragedy-karnataka-govt-gives-jobs-to-25-victims-members-same-hospital-rav/articleshow-ygn625y</guid>
            <pubDate>Wed, 22 Apr 2026 04:34:24 +0530</pubDate>
            <description><![CDATA[&lt;p&gt;ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರ ಮೇ 2ರಂದು ನಡೆದ ಆಮ್ಲಜನಕ ದುರಂತದಲ್ಲಿ ಮೃತಪಟ್ಟ 25 ಮಂದಿಯ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರವು ಅದೇ ಆಸ್ಪತ್ರೆಯಲ್ಲಿ ಕಾಯಂ ಉದ್ಯೋಗ ನೀಡಿದೆ. ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kps3zfne0kyyrjyv2jzv3qhg,imgname-----------------------2026-04-22t042307.857-1776812015277.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ &lt;/strong&gt;ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್&zwnj; ವೇಳೆ ಸಂಭವಿಸಿದ್ದ ಆಮ್ಲಜನಕ ದುರಂತದಿಂದ ಮೃತಪಟ್ಟವರ ಪೈಕಿ 25 ಮಂದಿಯ ಕುಟುಂಬದವರಿಗೆ ರಾಜ್ಯ ಸರ್ಕಾರ ಅದೇ ಜಿಲ್ಲಾಸ್ಪತ್ರೆಯಲ್ಲಿ ಕಾಯಂ ಉದ್ಯೋಗ ನೀಡಿದೆ.&amp;nbsp;&lt;/p&gt;&lt;p&gt;ಗುಂಡ್ಲುಪೇಟೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿತರಣೆ ಮಾಡಿದರು. 2021ರ ಮೇ 2ರಂದು ಈ ದುರಂತ ಸಂಭವಿಸಿತ್ತು. ಮೃತರ ಕುಟುಂಬ ವರ್ಗಕ್ಕೆ ಕಾಯಂ ಉದ್ಯೋಗ ನೀಡುವುದಾಗಿ ಭಾರತ್&zwnj; ಜೋಡೋ ಯಾತ್ರೆ ವೇಳೆ ರಾಹುಲ್&zwnj; ಗಾಂಧಿ ಅವರು ಭರವಸೆ ನೀಡಿದ್ದರು.&lt;/p&gt;&lt;h2&gt;ಕೊನೆಗೂ ನ್ಯಾಯ ಸಿಕ್ತು&lt;/h2&gt;&lt;p&gt;ಕೊರೊನಾ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳು ನ್ಯಾಯಕ್ಕಾಗಿ ನಿರಂತರ ಹೋರಾಟಕ್ಕೆ ಮಾಡುತ್ತ ಬಂದಿದ್ದರು. ಇದೀಗ ಕೊನೆಗೂ ನ್ಯಾಯ ಸಿಕ್ಕಿದೆ. 5 ವರ್ಷಗಳ ಬಳಿಕ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಅದೇ ಆಸ್ಪತ್ರೆಯಲ್ಲಿ ಸರ್ಕಾರಿ ಕೆಲಸ ನೀಡಿದೆ.&lt;/p&gt;&lt;p&gt;ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೋನಾ ಸಮಯದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಅಂದು ಉಂಟಾದ ಆಘಾತ ಮತ್ತು ನೋವು ಇನ್ನೂ ಕುಟುಂಬಗಳನ್ನು ಕಾಡುತ್ತಿದ್ದು, ಜೀವನೋಪಾಯಕ್ಕಾಗಿ ಅವರು ಕಳೆದ ಐದು ವರ್ಷಗಳಿಂದ ಕಷ್ಟಗಳನ್ನು ಎದುರಿಸುತ್ತಿದ್ದರು.&lt;/p&gt;]]></content:encoded>
            <category>chamarajnagar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/chamarajanagar-oxygen-tragedy-karnataka-govt-gives-jobs-to-25-victims-members-same-hospital-rav/articleshow-ygn625y"/>
        </item>
        <item>
            <title><![CDATA[ಬಂಡೀಪುರದಲ್ಲಿ ಡ್ರೋನ್‌ ಮೂಲಕ ನಿಗಾವಹಿಸುತ್ತಿದ್ದ ಅಧಿಕಾರಿಗಳಿಗೆ ಕಂಡ ಬೇಟೆಗಾರ, ಡ್ರೋನ್‌ ಕಣ್ಣಿಗೆ ಸೆರೆಯಾದವನ ಬಂಧನ!]]></title>
            <link>https://kannada.asianetnews.com/karnataka-districts/thermal-drone-helps-stf-nab-suspected-poacher-in-bandipur-buffer-zone-assault-allegations-trigger-outrage-gdp/articleshow-yuvz0f3</link>
            <guid isPermaLink="true">https://kannada.asianetnews.com/karnataka-districts/thermal-drone-helps-stf-nab-suspected-poacher-in-bandipur-buffer-zone-assault-allegations-trigger-outrage-gdp/articleshow-yuvz0f3</guid>
            <pubDate>Wed, 08 Apr 2026 19:56:10 +0530</pubDate>
            <description><![CDATA[ಗುಂಡ್ಲುಪೇಟೆಯ ಬಂಡೀಪುರ ಅರಣ್ಯದಲ್ಲಿ ಥರ್ಮಲ್ ಡ್ರೋನ್ ಬಳಸಿ ಅಕ್ರಮ ಬೇಟೆಗಾರನನ್ನು ನಾಡ ಬಂದೂಕು ಸಮೇತ ಬಂಧಿಸಲಾಗಿದೆ. ಎಸ್&zwnj;ಟಿಪಿಎಫ್ ಸಿಬ್ಬಂದಿ ನಡೆಸಿದ ಈ ಕಾರ್ಯಾಚರಣೆಯು ಯಶಸ್ವಿಯಾದರೂ, ಬಂಧಿತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಪ್ರತಿಭಟನೆಗೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knpqnkgcxvvpjavp9n7q8ka9,imgname-bandipur-buffer-zone-1775658257932.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಂಡ್ಲುಪೇಟೆ:&lt;/strong&gt; ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್&zwnj; ಜೋನ್ ವ್ಯಾಪ್ತಿಯ ಭೀಮನಬೀಡು ಸಮೀಪದ ರಾಜ್ಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಗೆ ತೆರಳುತ್ತಿದ್ದವನನ್ನು ಎಸ್&zwnj;ಟಿಪಿಎಫ್&zwnj; (Special Tiger Protection Force) ಸಿಬ್ಬಂದಿ ಥರ್ಮಲ್ ಡ್ರೋನ್ ಸಹಾಯದಿಂದ ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧ ಮದ್ದಯ್ಯನಹುಂಡಿ ಗ್ರಾಮದ ನಾಗೇಶ್ ಎಂಬಾತನನ್ನು ಸೋಮವಾರ ರಾತ್ರಿ ನಾಡ ಬಂದೂಕು ಸಮೇತ ವಶಕ್ಕೆ ಪಡೆಯಲಾಗಿದೆ.&lt;/p&gt;&lt;h2&gt;ಡ್ರೋನ್ ಮೂಲಕ ಪತ್ತೆ, ಮನೆಗೂ &amp;nbsp;ಹೋದ ತಂಡ&lt;/h2&gt;&lt;p&gt;ಅರಣ್ಯ ಪ್ರದೇಶದಲ್ಲಿ ಅಕ್ರಮ ಬೇಟೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಎಸ್&zwnj;ಟಿಪಿಎಫ್ ಸಿಬ್ಬಂದಿ ಮುಂಚಿತವಾಗಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಥರ್ಮಲ್ ಡ್ರೋನ್ ಹಾರಿಸಿ ಅರಣ್ಯ ಪ್ರದೇಶವನ್ನು ನಿಗಾವಹಿಸಿಸುತ್ತಿದ್ದಾಗ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಅತಿಕ್ರಮವಾಗಿ ಅರಣ್ಯ ಪ್ರವೇಶಿಸಿರುವುದು ಗಮನಕ್ಕೆ ಬಂದಿದೆ.&lt;/p&gt;&lt;p&gt;ಗ್ರಾಮದ ನಾಗೇಶ್&zwnj; ಹಾಗೂ ಮತ್ತೋರ್ವ ಭೀಮನಬೀಡು ಪ್ಲಾಂಟೇಶನ್&zwnj; ಬಳಿ ಅತಿಕ್ರಮ ಪ್ರವೇಶಿಸಿದ್ದು, ಡ್ರೋನ್ ಮೂಲಕ ಅವರನ್ನು ಹಿಂಬಾಲಿಸಿದ ಸಿಬ್ಬಂದಿಗೆ, ಅವರಲ್ಲಿ ಒಬ್ಬನಾದ ನಾಗೇಶ್ ತನ್ನ ಗ್ರಾಮವಾದ ಮದ್ದಯ್ಯನಹುಂಡಿಯಲ್ಲಿರುವ ಮನೆಗೆ ಹೋಗಿರುವುದು ಪತ್ತೆಯಾಯಿತು. ಬಳಿಕ ಸಿಬ್ಬಂದಿ ಆತನ ಮನೆಗೆ ತೆರಳಿ ತಪಾಸಣೆ ನಡೆಸಿದಾಗ ಲೋಡ್ ಮಾಡಿರುವ ನಾಡ ಬಂದೂಕು ಪತ್ತೆಯಾಗಿ, ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.&lt;/p&gt;&lt;h2&gt;ವಿಚಾರಣೆ ಮುಂದುವರಿಕೆ&lt;/h2&gt;&lt;p&gt;ಬಂಧಿತ ನಾಗೇಶ್&zwnj;ನನ್ನು ವಿಚಾರಣೆಗಾಗಿ ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಕಚೇರಿಗೆ ಕರೆತರಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಗುಂಡ್ಲುಪೇಟೆ ಬಫರ್ ಜೋನ್ ಅರಣ್ಯಾಧಿಕಾರಿ ಶಿವಕುಮಾರ್ ಅವರು ಮಾತನಾಡಿ, ಅರಣ್ಯ ಪ್ರದೇಶದಲ್ಲಿ ಬೇಟೆ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ, ಥರ್ಮಲ್ ಡ್ರೋನ್ ಮೂಲಕ ಆರೋಪಿಯನ್ನು ಪತ್ತೆಹಚ್ಚಲಾಗಿದೆ. ನಂತರ ಮನೆಗೆ ತೆರಳಿ ನಾಡ ಬಂದೂಕು ವಶಪಡಿಸಿಕೊಂಡಿದ್ದೇವೆ ಎಂದು ವಿವರಿಸಿದರು.&lt;/p&gt;&lt;h2&gt;ಬಂಧಿತನ ಮೇಲೆ ಹಲ್ಲೆ ಆರೋಪ: ಕಚೇರಿ ಆವರಣದಲ್ಲಿ ಪ್ರತಿಭಟನೆ&lt;/h2&gt;&lt;p&gt;ಈ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಬಂಧಿತ ನಾಗೇಶ್ ಮೇಲೆ ಅರಣ್ಯ ಸಿಬ್ಬಂದಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಗುಂಡ್ಲುಪೇಟೆಯ ಎಸಿಎಫ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.&lt;/p&gt;&lt;p&gt;ಸಂಘಟನೆಗಳ ಮುಖಂಡ ಸುಭಾಷ್ ಮಾಡ್ರಹಳ್ಳಿ ಮಾತನಾಡಿ, &ldquo;ತನಿಖೆ ಪೂರ್ಣಗೊಳ್ಳುವ ಮೊದಲು ಯಾರನ್ನೂ ತಪ್ಪಿತಸ್ಥ ಎಂದು ಗುರುತಿಸಬಾರದು. ಆದರೆ ಆರೋಪಿಯನ್ನು ಹಲ್ಲೆ ಮಾಡಿರುವುದು ಖಂಡನೀಯ. ತಕ್ಷಣವೇ ಸಂಬಂಧಿತ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು,&rdquo; ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಾಹಿತಿ ಮದ್ದಯ್ಯನಹುಂಡಿ ನಾಗರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.&lt;/p&gt;&lt;p&gt;ಥರ್ಮಲ್ ಡ್ರೋನ್ ತಂತ್ರಜ್ಞಾನದ ಮೂಲಕ ಅಕ್ರಮ ಬೇಟೆಗಾರನನ್ನು ಪತ್ತೆಹಚ್ಚಿ ಬಂಧಿಸಿದ ಅರಣ್ಯ ಇಲಾಖೆ ಕ್ರಮ ಗಮನಾರ್ಹವಾದರೂ, ಬಂಧಿತನ ಮೇಲೆ ಹಲ್ಲೆ ಆರೋಪಗಳು ಹೊಸ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/thermal-drone-helps-stf-nab-suspected-poacher-in-bandipur-buffer-zone-assault-allegations-trigger-outrage-gdp/articleshow-yuvz0f3"/>
        </item>
    </channel>
</rss>
