<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 17 May 2026 22:26:37 +0530</lastBuildDate>
        <atom:link href="https://kannada.asianetnews.com/rss/chamarajnagar" rel="self" type="application/rss+xml"/>
        <item>
            <title><![CDATA[ಚಾಮರಾಜನಗರ: ಸಲೂನ್‌ಗೆ ಬಂದ ಮಂಗಕ್ಕೆ ಹೇರ್‌ ಕಟ್ ಮಾಡಿಸಿದ ಕ್ಷೌರಿಕ!]]></title>
            <link>https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m</link>
            <guid isPermaLink="true">https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m</guid>
            <pubDate>Sat, 09 May 2026 07:18:38 +0530</pubDate>
            <description><![CDATA[ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಸಲೂನ್&zwnj; ಒಂದಕ್ಕೆ ನಿತ್ಯ ಭೇಟಿ ನೀಡುತ್ತಿದ್ದ ಕೋತಿಗೆ, ಅದರ ಮಾಲೀಕ ದೇವರಾಜ್ ತಮಾಷೆಗಾಗಿ ಹೇರ್&zwnj; ಸ್ಟೈಲ್ ಮಾಡಿದ್ದಾರೆ. ಮನುಷ್ಯರಂತೆ ತಲೆಬಗ್ಗಿಸಿ ಕುಳಿತು ಕೋತಿ ಸಹಕರಿಸಿದ್ದು, ಈ ಅಪರೂಪದ ಘಟನೆಯನ್ನು ಗ್ರಾಹಕರೊಬ್ಬರು ವೀಡಿಯೋ ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr56eg5jzpnzvf2wz48pn8pc,imgname-----------------------2026-05-09t071229.412-1778290999474.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಚಾಮರಾಜನಗರ (ಮೇ.9) &lt;/strong&gt;ಚೇಷ್ಟೆಗೆ ಹೆಸರಾಗಿರುವ ಕೋತಿಗಳು ಒಮ್ಮೊಮ್ಮೆ ತಮ್ಮ ವಿಶೇಷ ವರ್ತನೆಗಳಿಂದ ಎಲ್ಲರ ಗಮನ ಸೆಳೆಯುತ್ತವೆ. ಜೊತೆಗೆ, ನೋಡುಗರ&zwnj;&zwnj; ಮೊಗದಲ್ಲಿ ನಗುವನ್ನು ಉಕ್ಕಿಸುತ್ತವೆ. ಅದರಂತೆ, ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಕೋತಿಗೆ ಹೇರ್&zwnj; ಸ್ಟೈಲ್ ಮಾಡಿದ ಅಪರೂಪದ ಘಟನೆ ನಡೆದಿದೆ.&lt;/p&gt;&lt;p&gt;ಗ್ರಾಮದ ದೇವು ಸಲೂನ್ ಎಂಬಲ್ಲಿಗೆ ಕೋತಿಯೊಂದು ದಿನವೂ ಬಂದು ಹೋಗುತ್ತಿತ್ತು.&zwnj; ಕನ್ನಡಿ&zwnj; ನೋಡುತ್ತಾ ಕುಳಿತುಕೊಳ್ಳುತ್ತಿತ್ತು.&zwnj; ಇದನ್ನು ಗಮನಿಸಿದ ಸಲೂನ್ ಮಾಲೀಕ ದೇವರಾಜ್&zwnj; ಗದರಿಸಿದರೂ&zwnj; ಕೋತಿ ಸಲೂನ್ ಬಿಟ್ಟು ಹೋಗುತ್ತಿರಲಿಲ್ಲ.&lt;/p&gt;&lt;p&gt;ಗುರುವಾರದಂದು ಸಲೂನ್&zwnj;ಗೆ ಬಂದ ಮಂಗನನ್ನು ಕಂಡ ದೇವರಾಜ್ ಮೊದಲು ತಲೆ ಬಾಚಿದ್ದಾರೆ. ಪ್ರೀತಿಯಿಂದ ತಲೆ ಬಾಚಿದ್ದನ್ನು ಗಮನಿಸಿದ ಕೋತಿ ಮನುಷ್ಯರಂತೆ ತಲೆ ಬಗ್ಗಿಸಿ ಕುಳಿತಿದೆ.&zwnj; ನಂತರ ಹೇರ್&zwnj; ಸ್ಟೈಲ್ ಮಾಡಿದ್ದು, ಅಲ್ಲಿಯೇ ಇದ್ದ ಗ್ರಾಹಕರೊಬ್ಬರು ವಿಡಿಯೋ ಸೆರೆ ಹಿಡಿದಿದ್ದಾರೆ.&lt;/p&gt;&lt;p&gt;ಈ ಕುರಿತು ದೇವರಾಜು ಮಾತನಾಡಿ, ಗುಂಪೊಂದರಲ್ಲಿ ಇದ್ದ ಈ ಮಂಗ ದಿನನಿತ್ಯ ಸಲೂನ್ ಬಳಿ ಬರುತ್ತಿತ್ತು. ಎಷ್ಟೇ ಗದರಿಸಿದರೂ ನನ್ನ ಕೆಲಸ ಮುಗಿಯುವವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ತಮಾಷೆಗಾಗಿ ತಲೆ ಬಾಚಿದೆ, ಕೋತಿ ತಲೆ ಬಗ್ಗಿಸಿ ಕುಳಿತು ಮತ್ತಷ್ಟು ತಲೆ ಬಾಚುವಂತೆ ಕೇಳಿಕೊಳ್ಳುವಂತೆ ವರ್ತಿಸಿದಾಗ ಹೇರ್&zwnj;ಸ್ಟೈಲ್ ಮಾಡಿದೆ ಎಂದರು.&lt;/p&gt;]]></content:encoded>
            <category>chamarajnagar</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chamarajanagar-barber-gives-haircut-to-monkey-that-walked-into-salon-rav/articleshow-0ng3k3m"/>
        </item>
        <item>
            <title><![CDATA[ಸಂಕಷ್ಟದಿಂದ ಆಶಾಕಿರಣದತ್ತ, ಚಾಮರಾಜನಗರದ ಅಜ್ಜಿ ಕೈ ಹಿಡಿದ ಸಮಾಜ: ಮಕ್ಕಳಿಗೆ ಮನೆ-ಧನಸಹಾಯ ಭರವಸೆ]]></title>
            <link>https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826</link>
            <guid isPermaLink="true">https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826</guid>
            <pubDate>Sun, 26 Apr 2026 18:50:19 +0530</pubDate>
            <description><![CDATA[&lt;p&gt;ಅನಾಥ ಮಕ್ಕಳ ಪಾಲನೆ ಪೋಷಣೆ ಮಾಡುತ್ತಿರುವ ಅಜ್ಜಿಗೆ ಒಂದು ಮನೆ, ಅಗತ್ಯ ಧನಸಹಾಯ ಮಕ್ಕಳಿಗೆ ಆಧಾರ್ ಕಾರ್ಡ್ ಪಡಿತರ ಚೀಟಿ ಮಾಡಿಸಿಕೊಡುವ ಭರವಸೆ ಸಿಕ್ಕಿದ್ದು ಈ ಮಕ್ಕಳ ಭವಿಷದಲ್ಲಿ ಆಶಾಕಿರಣ ಮೂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq4z4ed0stxn3qfghq63hqvp,imgname-knk-1777209588128.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು.ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.26): &lt;/strong&gt;ಏಷ್ಯಾನೆಟ್ ಸುವರ್ಣ ನ್ಯೂಸ್ ಮಾಡಿದ್ದ ಅನಾಥ ಮಕ್ಕಳ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ಇಬ್ಬರು ಅನಾಥ ಮಕ್ಕಳ ಪಾಲನೆ ಪೋಷಣೆ ಮಾಡುತ್ತಿರುವ ಅಜ್ಜಿಗೆ ಒಂದು ಮನೆ, ಅಗತ್ಯ ಧನಸಹಾಯ ಮಕ್ಕಳಿಗೆ ಆಧಾರ್ ಕಾರ್ಡ್ ಪಡಿತರ ಚೀಟಿ ಮಾಡಿಸಿಕೊಡುವ ಭರವಸೆ ಸಿಕ್ಕಿದ್ದು ಈ ಮಕ್ಕಳ ಭವಿಷದಲ್ಲಿ ಆಶಾಕಿರಣ ಮೂಡಿದೆ. ಚಾಮರಾಜನಗರ ತಾಲೂಕಿನ ಮೂಡಲ ಅಗ್ರಹಾರದ ಮಹದೇವ ಕುಡಿತದ ದಾಸನಾಗಿದ್ದ. ಎರಡು ತಿಂಗಳ ಹಿಂದೆ ಕುಡಿದ ಅಮಲಿನಲ್ಲಿ ತನ್ನ ಪತ್ನಿ ಸುಮತಿಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಿದ್ದ.&lt;/p&gt;&lt;p&gt;ಸುಟ್ಟಗಾಯಗಳಿಂದ ಸುಮತಿ ಮೃತಪಟ್ಟಿದ್ದಳು. ಪತಿ ಜೈಲು ಸೇರಿದ್ದು ಈ ದಂಪತಿಗೆ ಇದ್ದ 6 ವರ್ಷ ಹಾಗು ಒಂದುವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದೀಗ ತಂದೆ ತಾಯಿ ಇಲ್ಲದೆ ತಬ್ಬಲಿಗಳಾಗಿದ್ದಾರೆ. ವಯಸ್ಸಾದ ಅಜ್ಜಿ ಅಂಕಮ್ಮನಿಗೆ ಈ ಎಳೆಯ ಮಕ್ಕಳನ್ನು ಸಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಆದಾಯ ಮೂಲಗಳಿಲ್ಲದೆ ಅಜ್ಜಿ ತನಗೆ ಬರುವ 800 ರೂಪಾಯಿ ವಿಧವಾ ವೇತನದಲ್ಲೇ ಈ ಮಕ್ಕಳನ್ನು ಪೋಷಿಸಬೇಕಾದ ದುಸ್ಥಿಯ ಬಗ್ಗೆ ಏಷ್ಯನೆಟ್ ಸುವರ್ಣ ನ್ಯೂಸ್ ವರದಿ ಮಾಡಿತ್ತು.&lt;/p&gt;&lt;h2&gt;&lt;strong&gt;ಕಣ್ಣೀರ ಕಥೆಗೆ ಮಾನವೀಯತೆ ಸ್ಪಂದನೆ&lt;/strong&gt;&lt;/h2&gt;&lt;p&gt;ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಗಮನಿಸಿದ ಚಾಮರಾಜನಗರ ಜಿಲ್ಲಾ ವೀರಶೈವ ಮಹಾಸಭಾಧ್ಯಕ್ಷ ಮೂಡ್ಲುಪುರ ನಂದೀಶ್, ಮೂಡಲ ಅಗ್ರಹಾರ ಗ್ರಾಮಕ್ಕೆ ಧಾವಿಸಿ ಅನಾಥ ಮಕ್ಕಳ ಪಾಲನೆ ಪೋಷಣೆಗೆ ಧನ ಸಹಾಯ ಮಾಡಿದ್ದಾರೆ. ಅಗತ್ಯ ದಿನಸಿ ಸಾಮಾನುಗಳನ್ನು ನೀಡಿದ್ದಾರೆ ಮಕ್ಕಳು ಒಂದು ಹಂತಕ್ಕೆ ಬರುವ ತನಕ ಇನ್ನು ಮುಂದೆಯು ಪ್ರತಿ ತಿಂಗಳು ಎರಡರಿಂದ ಮೂರು ಸಾವಿರ ರೂಪಾಯಿ ನಗದು ಸಹಾಯ ಹಾಗು ಅಗತ್ಯ ದಿನಸಿ ನೀಡುವುದಾಗಿ ಅವರು ತಿಳಿಸಿದ್ದಾರೆ.&lt;/p&gt;&lt;p&gt;ಅಲ್ಲದೆ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸ್ಪಂಧಿಸಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಮೂಡಲ ಅಗ್ರಹಾರಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿಯು ಮೊಮ್ಮಕ್ಕಳನ್ನು ಸಾಕುತ್ತಿರುವ ಅಜ್ಜಿ ಅಂಕಮ್ಮನಿಗೆ ವಾತ್ಸಲ್ಯ ಕಾರ್ಯಕ್ರಮದಡಿ ಒಂದು ಮನೆ ನಿರ್ಮಾಣ ಹಾಗು ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಧನ ಸಹಾಯ ಮಾಡುವ ಭರವಸೆ ನೀಡಿದ್ದಾರೆ.&lt;/p&gt;&lt;p&gt;ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸ್ಪಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸ್ವಯಂ ಸೇವಕ ಆರ್ ಸತೀಶ್ಕುಮಾರ್ ಗ್ರಾಮಕ್ಕೆ ಧಾವಿಸಿ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ಇಲಾಖೆಗಳಿಂದ ಪಡೆದು ತಂದೆ ತಾಯಿ ಇಲ್ಲದೆ ಅನಾಥರಾಗಿರುವ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿಕೊಡಲು ಕಾರ್ಯನಿರತರಾಗಿದ್ದಾರೆ ಅನಾಥ ಮಕ್ಕಳ ಸಂಕಷ್ಟದ ಬಗ್ಗೆ ಬೆಳಕು ಚಲ್ಲಿ ಅವರಿಗೆ ನೆರವಾಗಲು ಕಾರಣವಾದ ಏಷ್ಯನೆಟ್ ಸುವರ್ಣ ನ್ಯೂಸ್ ಗೆ ಗ್ರಾಮಸ್ಥರು ಧನ್ಯವಾದ ಹೇಳಿದ್ದಾರೆ..&lt;/p&gt;&lt;p&gt;ಅನಾಥ ಮಕ್ಕಳಿಗೆ ಸಹಾಯ ಹಸ್ತ ಚಾಚಿದ ಮೂಡ್ಲುಪುರ ನಂದೀಶ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿಗಳು ಹಾಗು ಕಾನೂನು ಸೇವಕ ಸತೀಶ್ಕುಮಾರ್ ಅವರ ಈ ಮಾನವೀಯ ಕಾರ್ಯ ಅನಾಥ ಮಕ್ಕಳ ಉತ್ತಮ ಭವಿಷ್ಯಕ್ಕೆ ಆಶಾಕಿರಣ ಮೂಡಿಸಿದೆ. ಈ ಮಕ್ಕಳಿಗೆ ಸಹಾಯ ಹಸ್ತ ಚಾಚಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chamarajanagar-orphan-children-help-grandmother-support-story-gvd/articleshow-1dgr826"/>
        </item>
        <item>
            <title><![CDATA[ಮೈ ಮೇಲೆ ಕತ್ತಿಯಿಂದ ಹೊಡೆದುಕೊಂಡು ರಕ್ತತರ್ಪಣೆ: ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು?]]></title>
            <link>https://kannada.asianetnews.com/festivals/chamarajanagar-kathi-habba-chaudeshwari-alagu-seve-gvd/articleshow-2th0pyr</link>
            <guid isPermaLink="true">https://kannada.asianetnews.com/festivals/chamarajanagar-kathi-habba-chaudeshwari-alagu-seve-gvd/articleshow-2th0pyr</guid>
            <pubDate>Mon, 11 May 2026 17:39:11 +0530</pubDate>
            <description><![CDATA[&lt;p&gt;ಅದೊಂದು ವಿಶಿಷ್ಟ ಹಬ್ಬ. ಮೈ ಮೇಲೆ ಹರಿತವಾದ ಕತ್ತಿಗಳಿಂದ ಹೊಡೆದುಕೊಂಡು ರಕ್ತತರ್ಪಣೆ ಮಾಡುವ ಆ ಹಬ್ಬದಲ್ಲಿನ ಆಚರಣೆ ನೋಡಿದರೆ ಮೈ ಜುಂ ಎನ್ನುತ್ತದೆ. ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krbf1gyc2v6e51qp13fhfz4f,imgname-bj-1778501338060.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಮೇ.11):&lt;/strong&gt; ಅದೊಂದು ವಿಶಿಷ್ಟ ಹಬ್ಬ. ಮೈ ಮೇಲೆ ಹರಿತವಾದ ಕತ್ತಿಗಳಿಂದ ಹೊಡೆದುಕೊಂಡು ರಕ್ತತರ್ಪಣೆ ಮಾಡುವ ಆ ಹಬ್ಬದಲ್ಲಿನ ಆಚರಣೆ ನೋಡಿದರೆ ಮೈ ಜುಂ ಎನ್ನುತ್ತದೆ. ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು? ಈ ಸ್ಟೋರಿ ನೋಡಿ. ಚಾಮರಾಜನಗರದ ರಾಮಸಮುದ್ರದಲ್ಲಿ 28 ವರ್ಷಗಳ ಬಳಿಕ ಮೊದಲ ಬಾರಿಗೆ ಚೌಡೇಶ್ವರಿ ದೇವಿಯ 47 ನೇ ವರ್ಷದ ವರ್ದಂತೋತ್ಸವ ಹಾಗು ವಿಶಿಷ್ಟ ರೀತಿಯ ಕತ್ತಿ ಹಬ್ಬ ಆಚರಿಸಲಾಯ್ತು.&lt;/p&gt;&lt;p&gt;ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀ ರಾಮಲಿಂಗೇಶ್ವರ ಹಾಗು ಚೌಡೇಶ್ಚರಿ ಅಮ್ಮನವರಿಗೆ ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು. ರಾಕ್ಷಸರನ್ನು ಸಂಹಾರ ಮಾಡಿದ ಉಗ್ರ ಸ್ವರೂಪಿ ಚೌಡೇಶ್ವರಿ ದೇವಿಗೆ ರಕ್ತತರ್ಪಣೆ ಮಾಡಿ ಶಾಂತಗೊಳಿಸುವ ದ್ಯೋತಕವಾಗಿ ದೇವಾಂಗ ಸಮುದಾಯ ಈ ಹಬ್ಬ ಆಚರಿಸಿಕೊಂಡು ಬರುತ್ತಿದೆ. ನಾಲ್ಕು ದಿನಗಳ ಕಾಲ ಚೌಡೇಶ್ವರಿ ದೇವಿಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳೊಂದಿಗೆ ನಡೆದ ಹಬ್ಬದಲ್ಲಿ ಅಲಗು ಸೇವೆ ಪ್ರಮುಖವಾಗಿದೆ.&lt;/p&gt;&lt;p&gt;ಕತ್ತಿಹಬ್ಬದ ದಿನದಂದು ಬಿಳಿ ಕುದುರೆ ಮೇಲೆ ದೇವಿಯ ಕಳಶ ಇಟ್ಟು ಮೆರವಣಿಗೆ ಮಾಡಿ ನೂರಾರು ಮಂದಿ ಹರಿತವಾದ ಕತ್ತಿಗಳಿಂದ ತಮ್ಮ ಮೈಮೇಲೆ ಹೊಡೆದುಕೊಳ್ಳುತ್ತಾ ರಕ್ತ ಬರುವಂತೆ ತಮ್ಮ ದೇಹವನ್ನು ದಂಡಿಸಿಕೊಳ್ಳುತ್ತಾರೆ. ಕೆಲವರು ಖಡ್ಗಗಳ ಮೇಲೆ ಕುತ್ತಿಗೆ ಇಟ್ಟು ಅವರ ದೇಹದ ಮೇಲೆ ಇನ್ನಿತರರು ನಿಂತು ಕತ್ತಿಗಳಿಂದ ಹೊಡೆದುಕೊಳ್ಳುತ್ತಾರೆ. ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ.&lt;/p&gt;&lt;p&gt;ಕತ್ತಿ ಹಬ್ಬ ಆಚರಣೆಗೆ ಪೌರಾಣಿಕ ಹಿನ್ನಲೆಯು ಇದೆ. ದೇವಾನುದೇವತೆಗಳಿಗೆ ವಸ್ತ್ರ ತಯಾರು ಮಾಡುತ್ತಿದ್ದ ದೇವಾಂಗ ದೇವಲ ಮಹರ್ಷಿಯನ್ನು ಕೊಲ್ಲಲು ದೈತ್ಯ ರಾಕ್ಷಸರು ಮುಂದಾಗಿದ್ದಾಗ ಪಾರ್ವತಿ ದೇವಿ ಚೌಡೇಶ್ವರಿಯ ಅವತಾರವೆತ್ತಿ ರಾಕ್ಷಸರನ್ನು ಸಂಹಾರ ಮಾಡಿದಳು, ಬಳಿಕ ಉಗ್ರಸ್ವರೂಪಿಯಾಗಿದ್ದ ಚೌಡೇಶ್ವರಿಯ ಮುಂದೆ ದೇವಲ ಮಹರ್ಷಿ ಖಡ್ಗದಿಂದ ತನ್ನ ಮೈಲೆ ಮೇಲೆ ಹೊಡೆದುಕೊಂಡು ರಕ್ತ ತರ್ಪಣೆ ಮಾಡಿ ದೇವಿಯನ್ನು ಶಾಂತಗೊಳಿಸಿದರು ಎಂಬ ನಂಬಿಕೆ ಇದೆ. ಇದರ ದ್ಯೋತಕವಾಗಿ ಇಂದಿಗು ಕತ್ತಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ತಮಿಳುನಾಡು-ಆಂಧ್ರದಿಂದಲೂ ಭಕ್ತರು&lt;/strong&gt;&lt;/h2&gt;&lt;p&gt;ತೀರ ಅಪರೂಪ ಎನಿಸಿದ ಈ ಕತ್ತಿ ಹಬ್ಬದಲ್ಲಿ ರಾಜ್ಯವಷ್ಟೇ ಅಲ್ಲ ನೆರೆಯ ತಮಿಳುನಾಡು, ಆಂಧ್ರ ಪ್ರದೇಶಗಳಿಂದ ಭಕ್ತರು ಪಾಲ್ಗೊಂಡು ತಮ್ಮ ಕುಲದೇವತೆ ಚೌಡೇಶ್ವರಿ ದೇವಿಗೆ ಅಲಗುಸೇವೆ ಸಲ್ಲಿಸಿದರು. ಅಲಗುಸೇವೆ ಮೇಲ್ನೋಟಕ್ಕೆ ಹಿಂಸೆಯ ಆಚರಣೆಯಂತೆ ಕಂಡರೂ ಇದು ಹಿಂಸೆಯ ಪ್ರತೀಕವಲ್ಲ, ಬದಲಿಗೆ ಅರ್ಪಣಾ ಮನೋಭಾವದಿಂದ ದೇವಿಗೆ ಸಲ್ಲಿಸುವ ಸೇವೆ ಎಂಬುದು ಇಲ್ಲಿನ ಭಕ್ತರ ಪ್ರತಿಪಾದನೆಯಾಗಿದೆ. ಹಬ್ಬದ ಪ್ರಯುಕ್ತ ದೇವಾಂಗ ಕುಲಬಾಂಧವರ ಕತ್ತಿ ಹಬ್ಬ ( ಅಲಗು ಸೇವೆ) ಮೆರೆವಣಿಗೆಯನ್ನು ರಾಮಸಮುದ್ರದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/festivals/chamarajanagar-kathi-habba-chaudeshwari-alagu-seve-gvd/articleshow-2th0pyr"/>
        </item>
        <item>
            <title><![CDATA[ಹೊಸ ಕಾರಿಗೆ ಮಾದಪ್ಪನ ಪೂಜೆ… ಹಿಂದಿರುಗುವ ದಾರಿಯಲ್ಲೇ ಕಾರು ಪಲ್ಟಿ! ಭಕ್ತರು ಶಾಕ್!]]></title>
            <link>https://kannada.asianetnews.com/gallery/karnataka-districts/car-overturns-while-returning-from-mahadeshwara-temple-rav-3bti9cg</link>
            <guid isPermaLink="true">https://kannada.asianetnews.com/gallery/karnataka-districts/car-overturns-while-returning-from-mahadeshwara-temple-rav-3bti9cg</guid>
            <pubDate>Thu, 14 May 2026 10:31:34 +0530</pubDate>
            <description><![CDATA[&lt;p&gt;verturns while returning from Mahadeshwara temple ಹೊಸ ಕಾರು ಖರೀದಿಸಿದ ಖುಷಿ&hellip; ದೇವರ ದರ್ಶನ ಮಾಡಿಕೊಂಡು ಶುಭಾರಂಭ ಮಾಡೋಣ ಅನ್ನೋ ಭಕ್ತಿ&hellip; ಆದರೆ ಮನೆಗೆ ಹಿಂದಿರುಗುವ ದಾರಿಯಲ್ಲೇ ನಡೆದ ಘಟನೆ ನೋಡಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krjcfznnf8c2y9x38js9zqpd,imgname-----------------------2026-05-14t100357.592-1778733547189.jpg" type="image/jpeg" height="390" width="690"/>
            <content:encoded><![CDATA[&lt;p&gt;verturns while returning from Mahadeshwara temple ಹೊಸ ಕಾರು ಖರೀದಿಸಿದ ಖುಷಿ&hellip; ದೇವರ ದರ್ಶನ ಮಾಡಿಕೊಂಡು ಶುಭಾರಂಭ ಮಾಡೋಣ ಅನ್ನೋ ಭಕ್ತಿ&hellip; ಆದರೆ ಮನೆಗೆ ಹಿಂದಿರುಗುವ ದಾರಿಯಲ್ಲೇ ನಡೆದ ಘಟನೆ ನೋಡಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ&lt;/p&gt;&lt;img&gt;&lt;p&gt;ಹೊಸ ಕಾರು ಖರೀದಿಸಿದ ಖುಷಿ&hellip; ದೇವರ ದರ್ಶನ ಮಾಡಿಕೊಂಡು ಶುಭಾರಂಭ ಮಾಡೋಣ ಅನ್ನೋ ಭಕ್ತಿ&hellip; ಆದರೆ ಮನೆಗೆ ಹಿಂದಿರುಗುವ ದಾರಿಯಲ್ಲೇ ನಡೆದ ಘಟನೆ ನೋಡಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.&lt;/p&gt;&lt;p&gt;ಮಂಡ್ಯ ಮೂಲದ ಭಕ್ತರು ಹೊಸ ಕಾರು ಖರೀದಿಸಿದ್ದರು. ಮೊದಲು ಮಾದಪ್ಪನ ಆಶೀರ್ವಾದ ಪಡೆದು ಬಳಿಕ ಕಾರು ಓಡಿಸೋಣ&rdquo; ಅಂತಾ ಚಾಮರಾಜನಗರದ ಮಾದಪ್ಪನ ಬೆಟ್ಟಕ್ಕೆ ಕುಟುಂಬ ಸಮೇತ ಬಂದಿದ್ದರು.&lt;/p&gt;&lt;img&gt;&lt;p&gt;ಹೊಸ ಕಾರೇ ಕ್ಷಣಾರ್ಧದಲ್ಲಿ ರಸ್ತೆಯ ಬದಿಗೆ ಉರುಳಿ ಬಿದ್ದ ದೃಶ್ಯ ನೋಡಿ ಸ್ಥಳೀಯರು ಕೂಡ ಬೆಚ್ಚಿಬಿದ್ದರು. ಕಾರಿನ ಮುಂಭಾಗ ಜಖಂಗೊಂಡಿದ್ದರೂ, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;p&gt;ದೇವರ ದರ್ಶನಕ್ಕೆ ಬಂದಿದ್ದೇವೆ&hellip; ಇದೇ ರೀತಿ ಆಗುತ್ತೆ ಅಂತ ಯಾರು ಊಹಿಸಿದ್ದರು? ಎಂದು ಕುಟುಂಬದವರು ಅಳಲು.&lt;/p&gt;&lt;img&gt;&lt;p&gt;ಒಂದು ಕಡೆ 'ದೇವರ ಕೃಪೆಯಿಂದಲೇ ದೊಡ್ಡ ಅನಾಹುತ ತಪ್ಪಿತು' ಅನ್ನೋ ನೆಮ್ಮದಿ&hellip; ಇನ್ನೊಂದು ಕಡೆ 'ದರ್ಶನಕ್ಕೆ ಬಂದು ಇಂಥ ಅವಘಡ ಯಾಕಾಯಿತು?' ಅನ್ನೋ ಪ್ರಶ್ನೆ ಭಕ್ತರನ್ನು ಕಾಡುತ್ತಿದೆ.&lt;/p&gt;&lt;p&gt;ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;]]></content:encoded>
            <category>chamarajnagar</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/car-overturns-while-returning-from-mahadeshwara-temple-rav-3bti9cg"/>
        </item>
        <item>
            <title><![CDATA[ಕಾವೇರಿ ನದಿಯಲ್ಲಿ ಅಪರಿಚಿತ ಶವ ಪತ್ತೆ: ಹಲವು ಅನುಮಾನಗಳಿಗೆ ಕಾರಣ? ತನಿಖೆ ಶುರು!]]></title>
            <link>https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh</link>
            <guid isPermaLink="true">https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh</guid>
            <pubDate>Wed, 22 Apr 2026 18:15:04 +0530</pubDate>
            <description><![CDATA[&lt;p&gt;ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wdx0cgghy8mx26afg4f5tv,imgname-vdvdv-1757595730320.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.22):&lt;/strong&gt; ಸುಮಾರು ಒಂದು ತಿಂಗಳ ಹಿಂದೆ ಸಾವನ್ನಪ್ಪಿರುವ 50 ರಿಂದ 70 ವರ್ಷದ ಅಪರಿಚಿತ ಪುರುಷನ ಶವವು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಬೂದುಗಟ್ಟೆ ದೊಡ್ಡಿಯ ಕಾವೇರಿ ನದಿಯ ಬಳಿ ಪತ್ತೆಯಾಗಿದ್ದು, ಸಂಪೂರ್ಣವಾಗಿ ದೇಹ ಕುಸಿದು ಮೂಳೆಗಳ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾವೇರಿ ನದಿಯ ಮಧ್ಯಭಾಗದಲ್ಲಿ ಶವವೊಂದು ಬಿದ್ದಿರುವ ಫೋಟೋವನ್ನು ಬೆಂಗಳೂರಿನ ಪ್ರವಾಸಿಗನೊಬ್ಬನು ಮೊಬೈಲ್&zwnj;ನಲ್ಲಿ ಸೆರೆಹಿಡಿದು ಮೊಬೈಲ್&zwnj;ನಲ್ಲಿ ಹಾಕಿದ್ದರು.&lt;/p&gt;&lt;p&gt;ತಕ್ಷಣವೇ ಕಾರ್ಯಪ್ರವೃತ್ತರಾದ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಕಾವೇರಿ ನದಿಯ ಬಳಿ ಶವವನ್ನು ಹುಡುಕಲಾರಂಬಿಸಿದರು ಪತ್ತೆಯಾಗದ ಕಾರಣ ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ ಜಂಟಿ ಕಾರ್ಯಾಚರಣೆ ಮಾಡುವ ವೇಳೆ ಕಾವೇರಿನದಿಯ ಮಧ್ಯಭಾಗದಲ್ಲಿ ಶವ ದೊರೆತ್ತಿದ್ದು, ಒಂದು ತಿಂಗಳ ಹಿಂದೆ ಮೃತಪಟ್ಟಿದ್ದು ಮೃತದೇಹ ಸಂಪೂರ್ಣ ಕುಸಿದಿದ್ದು ಬರೀ ಮೂಳೆಗಳು ಮಾತ್ರ ಇದ್ದು, ಶವವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;h2&gt;&lt;strong&gt;ವಾರಸುದಾರರಿಗಾಗಿ ಹುಡುಕಾಟ&lt;/strong&gt;&lt;/h2&gt;&lt;p&gt;ಈ ಶವವು ಮದ್ಯಸೇವನೆ ಮಾಡಿ ಸಾವನ್ನಪ್ಪಿರಬಹುದೆಂದು ಇಲ್ಲಾ ನದಿಗೆ ಯಾರಾದರೂ ಕೊಲೆ ಮಾಡಿ ಬೀಸಾಡಿರಬಹುದು ಅಥವಾ ಆಕಸ್ಮಿಕವಾಗಿ ಜಾರಿ ಮೃತಪಟ್ಟಿರಬಹುದೆಂದು ಊಹಿಸಲಾಗಿದ್ದು, ನಿಖರ ಮಾಹಿತಿ ತನಿಖೆಯಿಂದಷ್ಟೆ ಹೊರ ಬರಬೇಕಿದೆ. ಅಪರಿಚಿತ ಶವ ಎಂದು ದೂರು ದಾಖಲಾಗಿದ್ದು, ವಾರಸುದಾರರಿಗಾಗಿ ಹುಡುಕಾಟ ನಡೆದಿದ್ದು, ಶವವನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇದು ಕೊಲೆಯೋ ಆತ್ಮ*ಹತ್ಯೆಯೋ ತನಿಖೆಯಿಂದಷ್ಟೆ ತಿಳಿಯಬೇಕಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/chamarajanagar-unidentified-body-found-kaveri-river-gvd/articleshow-5uxsvkh"/>
        </item>
        <item>
            <title><![CDATA[1000 ಕೋಟಿ ಸಿನಿಮಾಗಳಿಂದ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಚೇತನ್ ಅಹಿಂಸಾ]]></title>
            <link>https://kannada.asianetnews.com/karnataka-districts/chetan-ahimsa-on-ambedkar-equality-and-social-justice-gvd/articleshow-cbsne5b</link>
            <guid isPermaLink="true">https://kannada.asianetnews.com/karnataka-districts/chetan-ahimsa-on-ambedkar-equality-and-social-justice-gvd/articleshow-cbsne5b</guid>
            <pubDate>Wed, 13 May 2026 17:15:52 +0530</pubDate>
            <description><![CDATA[&lt;p&gt;ಸಮಸಮಾಜದ ಕನಸು ಇನ್ನೂ ಪೂರ್ಣವಾಗಿ ನನಸಾಗಿಲ್ಲ. ಮಂಗಳ ಗ್ರಹಕ್ಕೆ ಹೋಗಿ ಬಂದರೆ, ₹100ರಿಂದ ₹1000 ಕೋಟಿ ಸಿನೆಮಾಗಳನ್ನು ಮಾಡಿದರೆ ಉತ್ತಮ ಸಮಾಜ(ದೇಶದ ಅಭಿವೃದ್ಧಿ) ಸಾಧ್ಯವಿಲ್ಲ ಎಂದು ಅಹಿಂಸಾ ಚೇತನ್&zwnj; ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jkr11w3f2tnpvsx05cr2c392,imgname-actor-chetan-ahimsa.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಮೇ.13): &lt;/strong&gt;ಮಂಗಳ ಗ್ರಹಕ್ಕೆ ಹೋಗಿ ಬಂದರೆ, ₹100ರಿಂದ ₹1000 ಕೋಟಿ ಸಿನೆಮಾಗಳನ್ನು ಮಾಡಿದರೆ ಉತ್ತಮ ಸಮಾಜ(ದೇಶದ ಅಭಿವೃದ್ಧಿ) ಸಾಧ್ಯವಿಲ್ಲ ಎಂದು ಅಹಿಂಸಾ ಚೇತನ್&zwnj; ಹೇಳಿದರು. ಅಂಬೇಡ್ಕರ್&zwnj; ಅವರು ಸಂವಿಧಾನದ ಮೂಲಕ ಸಾಕಾರಗೊಳಿಸಲು ಸಮಸಮಾಜ ಕನಸನ್ನು ಕಂಡರು. ನಾವೆಲ್ಲರೂ ಸಮಸಮಾಜ ಕಟ್ಟಿದಾಗ ಮಾತ್ರ ಅಂಬೇಡ್ಕರ್&zwnj; ಅವರ ಕನಸು ನನಸಾಗಿಸಲು ಸಾಧ್ಯ ಎಂದು ಹೇಳಿದರು.&lt;/p&gt;&lt;p&gt;ಜಾತಿ ತಾರತಮ್ಯ, ಅಸ್ಪೃಶ್ಯತೆ ಇಂದಿಗೂ ಅಲ್ಲಲ್ಲಿ ಕಂಡು ಬರುತ್ತಿದೆ. ಸಮಸಮಾಜದ ಕನಸು ಇನ್ನೂ ಪೂರ್ಣವಾಗಿ ನನಸಾಗಿಲ್ಲ. ಅದಕ್ಕಾಗಿ ಹೋರಾಟ ನಡೆಯುತ್ತಲೇ ಇದೆ. ದೇಶದಲ್ಲಿ ಕೇವಲ ಕೆಲವರ ಕೈಯಲ್ಲಿ ಸಂಪತ್ತು ಇರದೆ ಆರ್ಥಿಕ ಸಮಾನತೆ ಇರಬೇಕಿದೆ, ಉತ್ತಮ ಸಮಾಜ ಕಟ್ಟಬೇಕು, ಅದು ನಮ್ಮೆಲ್ಲರ ಜವಾಬ್ದಾರಿ, ಅಂಬೇಡ್ಕರ್&zwnj; ಅವರು ಮಾಡಿ ತೋರಿಸಿದ್ದಾರೆ. ಆ ದಿಕ್ಕಿನಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.&lt;/p&gt;&lt;p&gt;ಅಂಬೇಡ್ಕರ್&zwnj;, ಕಾನ್ಶಿರಾಂ ಅವರ ವಿಚಾರಗಳನ್ನು ಬಹಳ ಗಟ್ಟಿಯಾಗಿ ರಾಜ್ಯದಲ್ಲಿ ಉಳಿಸಿರುವುದು ಇದೇ ಚಾಮರಾಜನಗರದ ಜನತೆ. ಅಂಬೇಡ್ಕರ್&zwnj; ಅವರ ಸಂವಿಧಾನದಿಂದ ದೇಶಕ್ಕೆ ಒಳ್ಳೆಯದು ಆಗಿದೆ, ಅವರನ್ನು ಸಂವಿಧಾನ ಶಿಲ್ಪಿಗೆ ಸೀಮಿತ ಮಾಡಿರುವುದು ಬಹಳ ನೋವಿನ ಸಂಗತಿಯಾಗಿದೆ. ಅವರು ಒಂದು ಸಂವಿಧಾನ ಅಲ್ಲ, 100 ದೇಶಗಳ ಸಂವಿಧಾನ ಬರೆಯುವ ಸಾಮಾರ್ಥ್ಯ ಅವರಲ್ಲಿತ್ತು ಎಂದರು.&lt;/p&gt;&lt;h2&gt;&lt;strong&gt;ಸರ್ವರಿಗೂ ಸಮಾನತೆ&lt;/strong&gt;&lt;/h2&gt;&lt;p&gt;ಅಂಬೇಡ್ಕರ್ ಅವರ ಪೋಸ್ಟರ್&zwnj;ಗಳಲ್ಲಿ, ಪ್ರತಿಮೆಗಳಲ್ಲಿ ಅಂಬೇಡ್ಕರ್ ವಾದ ಸಿಗಲ್ಲ. ನನ್ನನ್ನು ಪೂಜಿಸಬೇಡಿ, ನನ್ನನ್ನು ಓದಿ ಎಂದು ಅವರೇ ಹೇಳಿದ್ದಾರೆ. ಅವರ ವಿಚಾರಗಳನ್ನು ಜನರ ಮುಂದೆ ಇಡದಿದ್ದರೆ ಅಂಬೇಡ್ಕರ್ ಅವರನ್ನು ಪ್ರತಿಮೆಗೆ, ಸಂವಿಧಾನ ಶಿಲ್ಪಿಗೆ ಸೀಮಿತ ಮಾಡಿ&zwnj;ಬಿಡುತ್ತಾರೆ ಎಂದು ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಮೈಸೂರಿನ ಉರಿಲಿಂಗಿಪೆದ್ದಿಮಠದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದಲ್ಲಿ ಸರ್ವರಿಗೂ ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ ಎಂದರು.&lt;/p&gt;&lt;p&gt;ಅಂಬೇಡ್ಕ&zwnj;ರ್ ಅವರು ಬಾಲ್ಯದಲ್ಲಿ ತುಂಬಾ ಕಷ್ಟದಿಂದ ವಿದ್ಯಾಬ್ಯಾಸ ಮಾಡಿದರು, ನಮಗಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಬಡಾವಣೆ ನಿವಾಸಿಗಳು ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಎಸ್ಪಿ ಮಾಡುವ ಮೂಲಕ ಅವರನ್ನು ಜೀವಂತವಾಗಿಡುವ ಕೆಲಸ ಮಾಡಬೇಕು ಎಂದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chetan-ahimsa-on-ambedkar-equality-and-social-justice-gvd/articleshow-cbsne5b"/>
        </item>
        <item>
            <title><![CDATA[ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!]]></title>
            <link>https://kannada.asianetnews.com/karnataka-districts/golden-star-ganesh-wildlife-conservation-campaign-karnataka-gvd-videoshow-dks30gv</link>
            <guid isPermaLink="true">https://kannada.asianetnews.com/karnataka-districts/golden-star-ganesh-wildlife-conservation-campaign-karnataka-gvd-videoshow-dks30gv</guid>
            <pubDate>Wed, 06 May 2026 20:28:54 +0530</pubDate>
            <description><![CDATA[&lt;p&gt;ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ.&lt;/p&gt;]]></description>
            <media:content url="https://geo.dailymotion.com/player/x1tbu.html?video=xa8aur2" medium="video" height="768" width="1024"/>
            <content:encoded><![CDATA[&lt;p&gt;ಕನ್ನಡಪ್ರಭ-ಏಷ್ಯಾನೆಟ್&zwnj; ಸುವರ್ಣ ನ್ಯೂಸ್ ಸಂಸ್ಥೆಗಳು ಅರಣ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿರುವ &lsquo;ವನ್ಯಜೀವಿ ಸಂರಕ್ಷಣಾ ಅಭಿಯಾನ&rsquo;ದ 5ನೇ ಆವೃತ್ತಿಗೆ ನಟ ಗೋಲ್ಡನ್&zwnj; ಸ್ಟಾರ್&zwnj; ಗಣೇಶ್&zwnj; ರಾಯಭಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಗಣೇಶ್, ಮಲೆ ಮಹದೇಶ್ವರ ವನ್ಯಧಾಮಕ್ಕೆ ಅರಣ್ಯಾಧಿಕಾರಿಗಳ ಜೊತೆ ಭೇಟಿ ನೀಡಿದರು. ಜೊತೆಗೆ ಕಾಡಿನಿಂದ ನಾಡು ಎನ್ನುವುದು ಕೇವಲ ಘೋಷಣೆ ಆಗಿಯೇ ಉಳಿಯಬಾರದು. ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/golden-star-ganesh-wildlife-conservation-campaign-karnataka-gvd-videoshow-dks30gv"/>
        </item>
        <item>
            <title><![CDATA[ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ, ಕುಟುಂಬದೊಂದಿಗೆ ನಾಗಮಲೆಯತ್ತ ಹೋಗುತ್ತಿದ್ದಾಗ ಬೆಂಗಳೂರು ಮೂಲದ ಬಾಲಕ ಬಲಿ!]]></title>
            <link>https://kannada.asianetnews.com/karnataka-districts/leopard-kills-boy-during-pilgrimage-near-male-mahadeshwara-hills-in-karnataka-gdp/articleshow-isfyxlz</link>
            <guid isPermaLink="true">https://kannada.asianetnews.com/karnataka-districts/leopard-kills-boy-during-pilgrimage-near-male-mahadeshwara-hills-in-karnataka-gdp/articleshow-isfyxlz</guid>
            <pubDate>Sun, 10 May 2026 12:11:53 +0530</pubDate>
            <description><![CDATA[ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಬಳಿ ಪಾದಯಾತ್ರೆಗೆ ತೆರಳಿದ್ದ ಬೆಂಗಳೂರಿನ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಎಳೆದೊಯ್ದಿದ್ದು, ಬಳಿಕ ಅರಣ್ಯ ಪ್ರದೇಶದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಘಟನೆಯು ಪಾದಯಾತ್ರಿಗಳ ಸುರಕ್ಷತೆಯ ಬಗ್ಗೆ ಆತಂಕವನ್ನು ಹೆಚ್ಚಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr89sdqjww62ghpxymyp41nw,imgname-leopard-attack-male-mahadeshwara-hills-1778395166450.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ:&lt;/strong&gt; ಜಿಲ್ಲೆಯಲ್ಲಿ ಮನಕಲಕುವ ಘಟನೆ ಸಂಭವಿಸಿದ್ದು, ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಾದಯಾತ್ರೆ ಹೋಗುತ್ತಿದ್ದ ಬಾಲಕನನ್ನು ಚಿರತೆ ಎಳೆದೊಯ್ದು ಕೊಂದಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಲಗ್ಗೆರೆ ಮೂಲದ ಬಾಲಕ ಹರ್ಷಿತ್ ಎಂಬ ಬಾಲಕ ತನ್ನ ಕುಟುಂಬದೊಂದಿಗೆ ಮಹದೇಶ್ವರ ಬೆಟ್ಟದಿಂದ ನಾಗಮಲೆಯತ್ತ ಪಾದಯಾತ್ರೆ ನಡೆಸುತ್ತಿದ್ದನು. ಕುಟುಂಬದ ಸುಮಾರು 10 ಮಂದಿ ಒಟ್ಟಾಗಿ ತೆರಳುತ್ತಿದ್ದ ವೇಳೆ, ನಾಗಮಲೆ ಮಾರ್ಗದ ಇಂಡಿಗನತ್ತ ಸಮೀಪ ಚಿರತೆ ಬಾಲಕನನ್ನು ಕಚ್ಚಿ ಎಳೆದೊಯ್ದಿದಿದೆ.&lt;/p&gt;&lt;h2&gt;ಕಣ್ಣೆದುರೇ ಎಳೆದೊಯ್ದ ಚಿರತೆ&lt;/h2&gt;&lt;p&gt;ಪಾದಯಾತ್ರೆಯ ಮಧ್ಯದಲ್ಲೇ ಹಠಾತ್&zwnj;ವಾಗಿ ದಾಳಿ ನಡೆಸಿದ ಚಿರತೆ, ಬಾಲಕನನ್ನು ಕುಟುಂಬಸ್ಥರ ಕಣ್ಣೆದುರೇ ಎಳೆದೊಯ್ದಿದೆ. ಈ ದೃಶ್ಯ ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದು, ಕಿರುಚಾಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡರು.&lt;/p&gt;&lt;h2&gt;ಅಪಾಯಕರ ಮಾರ್ಗ, ಹೆಚ್ಚುತ್ತಿರುವ ಆತಂಕ&lt;/h2&gt;&lt;p&gt;ಸುದೀರ್ಘ ಶೋಧ ಕಾರ್ಯಾಚರಣೆಯ ಬಳಿಕ, ಬಾಲಕನ ಶವ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ನಾಗಮಲೆ ಮಾರ್ಗವು Male Mahadeshwara Hills ಭಾಗವಾಗಿದ್ದು, ಮಹದೇಶ್ವರನ 77 ಮಲೆಗಳಲ್ಲಿ ಒಂದಾಗಿದೆ. ಈ ಪ್ರದೇಶವು ದಟ್ಟ ಅರಣ್ಯದಿಂದ ಕೂಡಿರುವುದರಿಂದ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿದೆ. ಈ ಮಾರ್ಗದಲ್ಲಿ ಈ ಹಿಂದೆ ಕೂಡ ಇಂತಹ ದುರ್ಘಟನೆಗಳು ನಡೆದಿದ್ದು, ಪಾದಯಾತ್ರೆಗೆ ತೆರಳುವ ಭಕ್ತರಲ್ಲಿ ಆತಂಕ ಹೆಚ್ಚಿಸಿದೆ. ಕೆಲ ತಿಂಗಳ ಹಿಂದೆಯೂ ಇದೇ ಭಾಗದಲ್ಲಿ ಪಾದಯಾತ್ರೆ ವೇಳೆ ಚಿರತೆ ದಾಳಿಯಿಂದ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಾಯವಾಗಿತ್ತು.&lt;/p&gt;&lt;h2&gt;ಭಕ್ತರ ಸುರಕ್ಷತೆ ಬಗ್ಗೆ ಪ್ರಶ್ನೆಗಳು&lt;/h2&gt;&lt;p&gt;ಇಂತಹ ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಮಾರ್ಗಗಳಲ್ಲಿ ಭಕ್ತರ ಸುರಕ್ಷತೆ ಕುರಿತು ಪ್ರಶ್ನೆಗಳು ಎದ್ದಿವೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಕಾಡುಪ್ರಾಣಿಗಳ ಚಲನವಲನ ಹೆಚ್ಚಿರುವುದರಿಂದ, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/leopard-kills-boy-during-pilgrimage-near-male-mahadeshwara-hills-in-karnataka-gdp/articleshow-isfyxlz"/>
        </item>
        <item>
            <title><![CDATA[ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ]]></title>
            <link>https://kannada.asianetnews.com/gallery/state/mother-breaks-down-after-leopard-kills-her-child-in-male-mahadeshwara-hills-iuxh2y5</link>
            <guid isPermaLink="true">https://kannada.asianetnews.com/gallery/state/mother-breaks-down-after-leopard-kills-her-child-in-male-mahadeshwara-hills-iuxh2y5</guid>
            <pubDate>Sun, 10 May 2026 22:48:52 +0530</pubDate>
            <description><![CDATA[&lt;p&gt;ತಾಯಿ ಜೊತೆ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗುವನ್ನು ಕಣ್ಣ ಮುಂದೆ ಚಿರತೆ ಎತ್ತಿಕೊಂಡು ಹೋಗಿ ಕೊಂದಿತು ಎಂದು ಕಣ್ಣೀರಿಟ್ಟಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr9dztfkyh46fqqs4bk1769q,imgname-leopard-kills-child-mm-hills-1778433124851.png" type="image/jpeg" height="390" width="690"/>
            <content:encoded><![CDATA[&lt;p&gt;ತಾಯಿ ಜೊತೆ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗುವನ್ನು ಕಣ್ಣ ಮುಂದೆ ಚಿರತೆ ಎತ್ತಿಕೊಂಡು ಹೋಗಿ ಕೊಂದಿತು ಎಂದು ಕಣ್ಣೀರಿಟ್ಟಿದ್ದಾರೆ.&lt;/p&gt;&lt;img&gt;&lt;p&gt;ತಾಯಿ ಜೊತೆ ದೇವರ ದರ್ಶನಕ್ಕಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಬೆಂಗಳೂರಿನ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆಗೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ತಾಯಿ ಮುಂದೆ ಮಗನ ಎತ್ತಿಕೊಂಡು ಹೋದ ಚಿರತೆ ಕೊಂದು ಹಾಕಿದೆ. ಸುರೇಶ್ ಹಾಗೂ ಪವಿತ್ರ ದಂಪತಿಯ ಪುತ್ರ ಹರ್ಷಿತ್ ಗೌಡ ದುರಂತ ಅಂತ್ಯ ಕಂಡ ಬಾಲಕನ. ಇದೀಗ ಬಾಲಕನ ಮೃತದೇಹ ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸ ತಲುಪಿದೆ.&lt;/p&gt;&lt;img&gt;&lt;p&gt;ಇಂದು ಬೆಳಗ್ಗೆ 7.30 ಸುಮಾರಿಗೆ ಚಿರತೆ ದಾಳಿ ನಡೆಸಿದೆ. ಘಟನೆ ಕುರಿತು ಮೃತ ಬಾಲಕನ ತಂದೆ ಸುರೇಶ್ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ದೇವರ ದರ್ಶನಕ್ಕೆ ಹೋಗಿದ್ದ ಮಗ ಶವವಾಗಿ ಬಂದಿದ್ದಾನೆ. ನನ್ನ ಮಗನ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ತಂದೆ ಸುರೇಶ್ ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;ಅರಣ್ಯ ಇಲಾಖೆಯವರ ನಿರ್ಲಕ್ಷ್ಯದಿಂದ ಹೀಗಾಗಿದೆ. ನಾನು ಬೆಂಗಳೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಹೋಗಿ ವಿಚಾರಿಸುವವರೆಗೂ ನಮ್ಮ ಮನೆಯವರಿಗೆ ಮಾಹಿತಿ ನೀಡಿಲ್ಲ. ನಾನು ಮಧ್ಯಾಹ್ನ 2.30ಕ್ಕೆ ಹೋಗಿ ವಿಚಾರಿಸಿದಾಗ ಮೃತದೇಹ ತಂದು ಕೊಟ್ಟರು. ಇನ್ನು ಮುಂದೆಯಾದ್ರೂ ಅರಣ್ಯ ಇಲಾಖೆಯವರು ಸೂಕ್ತ ಭದ್ರತಾ ಕ್ರಮ ಕೈಗೊಳ್ಳಲಿ ಎಂದು ಸುರೇಶ್ ಮನವಿ ಮಾಡಿದ್ದಾರೆ.&lt;/p&gt;&lt;img&gt;&lt;p&gt;ನನ್ನ ಕಣ್ಣ ಮುಂದೆಯೇ ನನ್ನ ಮಗುವನ್ನು ಚಿರತೆ ಎತ್ತಿಕೊಂಡು ಹೊಯ್ತು. ನಾವು ಬೆದರಿಸಿದ್ರು ಮಗುವನ್ನು ಹೊತ್ತೊಯ್ದು ಕೊಂದು ಹಾಕಿದೆ. ನನ್ನ ಮಗ ನನ್ನ ಕಣ್ಮುಂದೆಯೇ ಸತ್ತು ಹೋಗಿದ್ದಾನೆ ಎಂದು ಹರ್ಷಿತ್ ತಾಯಿ ಪವಿತ್ರ ಕಣ್ಣೀರು ಹಾಕಿದ್ದಾರೆ.&lt;/p&gt;&lt;img&gt;&lt;p&gt;ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಸರಿಯಾದ ಭದ್ರತೆ ಕೈಗೊಂಡಿಲ್ಲ. ಹುಲಿ, ಚಿರತೆ ಇದೆ ಅಂತ ಒಂದು ಎಚ್ಚರಿಕೆ ಬೋರ್ಡ್ ಕೂಡ ಹಾಕಿಲ್ಲ. ನಮಗೆ ಮೊದಲೇ ಗೊತ್ತಿದ್ರೆ ಅಲ್ಲಿ ಹೋಗ್ತಾನೆ ಇರಲಿಲ್ಲ ಎಂದು ಮೃತ ಬಾಲಕನ ತಾಯಿ ಪವಿತ್ರ ಕಣ್ಣೀರು ಹಾಕಿದ್ದಾರೆ.&lt;/p&gt;&lt;h2&gt;ಹುಲಿ ಚಿರತೆ ಇದೆ ಗೊತ್ತಿದ್ದರೆ ಹೋಗ್ತಾನೆ ಇರಲಿಲ್ಲ&lt;/h2&gt;]]></content:encoded>
            <category>chamarajnagar</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/state/mother-breaks-down-after-leopard-kills-her-child-in-male-mahadeshwara-hills-iuxh2y5"/>
        </item>
        <item>
            <title><![CDATA[ಬಡವರಿಗೆ ಒಳ್ಳೆಯದು ಮಾಡಲು ಪ್ರಧಾನಿ ಮೋದಿ ಬಂದಿಲ್ಲ: ಸಚಿವ ಕೆ.ವೆಂಕಟೇಶ್ ವಾಗ್ದಾಳಿ]]></title>
            <link>https://kannada.asianetnews.com/karnataka-districts/minister-k-venkatesh-comments-on-modi-price-rise-hijab-gvd/articleshow-lg9cfh4</link>
            <guid isPermaLink="true">https://kannada.asianetnews.com/karnataka-districts/minister-k-venkatesh-comments-on-modi-price-rise-hijab-gvd/articleshow-lg9cfh4</guid>
            <pubDate>Sun, 17 May 2026 22:26:31 +0530</pubDate>
            <description><![CDATA[&lt;p&gt;ಬಡವರಿಗೆ ಒಳ್ಳೆಯದು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಂದಿಲ್ಲ. ಬಡವರ ರಕ್ತ ಹೀರಿ ಸರ್ಕಾರ ಹಣ ಮಾಡುವಂತೆ ಕಾಣುತ್ತಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಇಂಧನ ಬೆಲೆ ಏರಿಕೆ ವಿರುದ್ಧ ಅಸಮಾಧಾನ ಹೊರಹಾಕಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j7xtcxhpjjmbh16mn9564scv,imgname-vbv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ (ಮೇ.17): &lt;/strong&gt;ಬಡವರಿಗೆ ಒಳ್ಳೆಯದು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಂದಿಲ್ಲ. ಬಡವರ ರಕ್ತ ಹೀರಿ ಸರ್ಕಾರ ಹಣ ಮಾಡುವಂತೆ ಕಾಣುತ್ತಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಇಂಧನ ಬೆಲೆ ಏರಿಕೆ ವಿರುದ್ಧ ಅಸಮಾಧಾನ ಹೊರಹಾಕಿದರು. ಪ್ರಧಾನಿ ಮೋದಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ ಹಾಕಿದ್ದಾರೆ. ಈ ರೀತಿ ಬೆಲೆ ಏರಿಸಿದರೇ ಜನರು ಹೇಗೆ ಬದುಕಬೇಕು ಎಂದು ಕಿಡಿಕಾರಿದರು.&lt;/p&gt;&lt;p&gt;ಈಗ ಯುದ್ಧ ಇದೆ ಎನ್ನುತ್ತಿದ್ದಾರೆ. ಈ ಹಿಂದೆ ಬೆಲೆ ಏರಿಸಿದ್ದಾರಲ್ಲ, ಆಗ ಯುದ್ಧ ಎಲ್ಲಿತ್ತು. ಅಚ್ಚೇ ದಿನ್ ಎಂದು ಭಾಷಣ ಮಾಡುತ್ತಾರೆ. ದಿನಬಳಕೆ ವಸ್ತುಗಳ ಬೆಲೆ ಏರಿಸುವುದು ಅಚ್ಚೇ ದಿನವೇ. ಜನರಿಗೆ ಹೊರೆ ಹೊರಿಸಲು ಮೋದಿ ಬಂದಿದ್ದಾರೆ ಎಂದರು&zwnj;. ಇದೇ ವೇಳೆ, ಮತಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಮಾತನಾಡಿ, ಮತಪಟ್ಟಿ ಪರಿಷ್ಕರಣೆ ನಡೆಸಲಿ ನಾವು ಯಾರೂ ಬೇಡ ಎನ್ನುವುದಿಲ್ಲ. ಆದರೆ, ವಸ್ತುನಿಷ್ಠವಾಗಿರಲಿ, ಪಶ್ಚಿಮ ಬಂಗಾಳದಲ್ಲಿ 90 ಲಕ್ಷ ಮತದಾರರನ್ನು ಈ ಬಾರಿ ಕೈ ಬಿಟ್ಟಿದ್ದಾರೆ. ಬರೀ ಒಂದೂವರೆ ಸಾವಿರ ಮತಗಳ ಅಂತರದಿಂದ ಸಾಕಷ್ಟು ಟಿಎಂಸಿ ಅಭ್ಯರ್ಥಿಗಳು ಸೋತಿದ್ದಾರೆ ಎಂದರು.&lt;/p&gt;&lt;p&gt;ಹಿಜಾಬ್ ವಿವಾದ, ಸಮಸ್ಯೆಯನ್ನು ನಾವು ಹುಟ್ಟುಹಾಕಿಲ್ಲ, ಈ ಸಮಸ್ಯೆಯನ್ನು ಆಚೆಗೆ ತಂದಿದ್ದೇ ಬಿಜೆಪಿಯವರು, ಯಾವ ಕಾಲದಿಂದ ಹಿಜಾಬ್ ಇದೆ. ಈಗೇನು ಹೊಸದಾಗಿ ಬಂದಿದೆಯಾ ? ಸಾವಿರಾರು ವರ್ಷಗಳ ಪದ್ಧತಿಯನ್ನು ಬಿಜೆಪಿ ಅವರು ಬದಲಾಯಿಸಿ ಎಂದರೆ ಈಗ ಬದಲಾಯಿಸಲಾಗುತ್ತದೆಯೇ? ಆದಕ್ಕಾಗಿ ನಾವು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದು ಹಾಕಿದ್ದೇವೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.&lt;/p&gt;&lt;h2&gt;&lt;strong&gt;ನೀರಿನ ಸಮಸ್ಯೆ ಪರಿಹಾರ ತಡಮಾಡದಿರಿ&lt;/strong&gt;&lt;/h2&gt;&lt;p&gt;ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಕುಡಿಯುವ ನೀರಿನ ಸಂಬಂಧ ಚಾಮರಾಜನಗರ ಪಟ್ಟಣದ ವಿವಿಧ ವಾರ್ಡ್&zwnj;ಗಳಿಗೆ ಶನಿವಾರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು. ಮೊದಲಿಗೆ 1ನೇ ವಾರ್ಡಿನ ಸೋಮವಾರಪೇಟೆ ಬಡಾವಣೆಯ ಹೊರಭಾಗದಲ್ಲಿರುವ ಹಂದಿಜೋಗಿ ಕಾಲೋನಿಗೆ ಸಚಿವರು ಭೇಟಿ ನೀಡಿದರು. ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿದೆಯೇ, ಏನಾದರೂ ಸಮಸ್ಯೆ ಇದೆಯೇ ಎಂದು ನಿವಾಸಿಗಳನ್ನು ವಿಚಾರಿಸಿದರು.&lt;/p&gt;&lt;p&gt;ಬಳಿಕ ಮಾತನಾಡಿ, ಜನರಿಗೆ ಆದ್ಯತೆ ಮೇರೆಗೆ ನೀರು ಒದಗಿಸಬೇಕು. ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದರೆ ಟ್ಯಾಂಕರ್&zwnj; ಮೂಲಕ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಸ್ಥಳದಲ್ಲಿಯೇ ಇದ್ದ ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.ಇದೇ ವೇಳೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಸ್ಪಂದಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.&lt;/p&gt;&lt;p&gt;ಬಳಿಕ ಸೋಮವಾರಪೇಟೆ ಹಾಗೂ ಗಾಳೀಪುರ ಬಡಾವಣೆಗೆ ಆಗಮಿಸಿದ ವೆಂಕಟೇಶ್&zwnj;, ಅಲ್ಲಿಯೂ ನೀರಿನ ಸಮಸ್ಯೆ ಕುರಿತು ಜನರೊಂದಿಗೆ ಮಾತನಾಡಿದರು. ನೀರು 3 ದಿನಗಳಿಗೊಮ್ಮೆ ಸರಬರಾಜು ಆಗುತ್ತಿದೆ. ಹೆಚ್ಚುವರಿ ಬೋರ್&zwnj;ವೆಲ್ ಕೊರೆಸಬೇಕು. ಕಸ ಸಂಗ್ರಹಣೆ ವಾಹನ ವಾರಕ್ಕೊಮ್ಮೆಯಾದರೂ ಬರಬೇಕು. ಚರಂಡಿಗಳು ಸ್ವಚ್ಚತೆಯಿಲ್ಲದೆ ದುರ್ವಸನೆಯಿಂದ ಕೂಡಿವೆ. ಅದನ್ನು ಸರಿಪಡಿಸುವಂತೆ ಬಡಾವಣೆಗೆ ನಿವಾಸಿಗಳು ಸಚಿವರಿಗೆ ಮನವಿ ಮಾಡಿದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-k-venkatesh-comments-on-modi-price-rise-hijab-gvd/articleshow-lg9cfh4"/>
        </item>
        <item>
            <title><![CDATA[ಲವ್ ಮಾಡಿದ ಜೋಡಿಗೆ ಮದುವೆ ಮಾತುಕತೆಗೆ ಬಂದವರು ಚಾಕು, ಚೂರಿ, ಚೇರಿನಿಂದ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದರು!]]></title>
            <link>https://kannada.asianetnews.com/gallery/karnataka-districts/chamarajanagar-kollegala-wedding-house-violence-knife-stabbing-5-injured-sat-p09g7es</link>
            <guid isPermaLink="true">https://kannada.asianetnews.com/gallery/karnataka-districts/chamarajanagar-kollegala-wedding-house-violence-knife-stabbing-5-injured-sat-p09g7es</guid>
            <pubDate>Wed, 29 Apr 2026 16:48:26 +0530</pubDate>
            <description><![CDATA[ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆಯಬೇಕಿದ್ದ ಮದುವೆಯೊಂದು ವಧು-ವರರ ಕುಟುಂಬಗಳ ನಡುವಿನ ಗಲಾಟೆಯಿಂದ ರಣರಂಗವಾಗಿದೆ. ಚಿನ್ನಾಭರಣ ಮತ್ತು ಕಾರಿನ ಬೇಡಿಕೆ ವಿಚಾರವಾಗಿ ನಡೆದ ಸಂಘರ್ಷದಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಪ್ರೀತಿ ಮದುವೆ ಮುರಿದುಬಿದ್ದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqcdbprjg48vexjxaga4sf87,imgname-greater-bengaluru-govt-building-tax--5--1777459387153.jpg" type="image/jpeg" height="390" width="690"/>
            <content:encoded><![CDATA[ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆಯಬೇಕಿದ್ದ ಮದುವೆಯೊಂದು ವಧು-ವರರ ಕುಟುಂಬಗಳ ನಡುವಿನ ಗಲಾಟೆಯಿಂದ ರಣರಂಗವಾಗಿದೆ. ಚಿನ್ನಾಭರಣ ಮತ್ತು ಕಾರಿನ ಬೇಡಿಕೆ ವಿಚಾರವಾಗಿ ನಡೆದ ಸಂಘರ್ಷದಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಪ್ರೀತಿ ಮದುವೆ ಮುರಿದುಬಿದ್ದಿದೆ.&lt;img&gt;&lt;p&gt;&lt;strong&gt;ಚಾಮರಾಜನಗರ (ಏ.29): ಮ&lt;/strong&gt;ದುವೆ ಎಂದರೆ ಅಲ್ಲಿ ಸಂಭ್ರಮ, ಸಡಗರ ಇರಬೇಕು. ಆದರೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದ ಮದುವೆಯೊಂದು ರಣಾಂಗಣವಾಗಿ ಮಾರ್ಪಟ್ಟಿದೆ. ವಧು-ವರನ ಕುಟುಂಬಸ್ಥರ ನಡುವೆ ನಡೆದ ಭೀಕರ ಗಲಾಟೆಯಲ್ಲಿ ಪರಸ್ಪರ ಚಾಕು ಇರಿತ ನಡೆದಿದ್ದು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ಕೊಳ್ಳೇಗಾಲ ಪಟ್ಟಣದ ಆರ್&zwnj;ಎಂ (RM) ಛತ್ರದಲ್ಲಿ ಮುದಾಸಿರ್ ಹಾಗೂ ಗುಲ್ನಾಜ್ ಭಾನು ಎಂಬುವವರ ವಿವಾಹ ನಿಗದಿಯಾಗಿತ್ತು. ಆದರೆ ಮದುವೆಯ ಶಾಸ್ತ್ರಗಳ ನಡುವೆಯೇ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಶುರುವಾಗಿದೆ. ವಧುವಿಗೆ ಮಾತಿನಂತೆ ಚಿನ್ನಾಭರಣ ನೀಡಿಲ್ಲ ಎಂಬ ಆರೋಪದ ಮೇಲೆ ಮಾತುಕತೆ ನಡೆಸಲು ವರನ ಕಡೆಯವರು ವಧುವಿನ ಮನೆಗೆ ಹೋಗಿದ್ದರು. ಈ ವೇಳೆ ಮಾತುಕತೆ ವಿಕೋಪಕ್ಕೆ ತಿರುಗಿ, ಪರಸ್ಪರ ಚಾಕು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಈ ಭೀಕರ ಸಂಘರ್ಷದಲ್ಲಿ ವರನ ಸೋದರ ಸಂಬಂಧಿಗಳಾದ ಸಮೀರ್ ಮತ್ತು ಶೋಯೆಬ್ ಹಾಗೂ ವಧುವಿನ ಸಂಬಂಧಿಕರಾದ ಪೈರೋಜ್ ಪಾಷಾ, ಅಬ್ದುಲ್ ವಾಯಿದ್ ಮತ್ತು ಅಬ್ದುಲ್ ಆರೀಪ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಲಾಟೆಯ ದೃಶ್ಯಗಳು ಮೊಬೈಲ್&zwnj;ನಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕುಟುಂಬಸ್ಥರು ಕುರ್ಚಿ ಹಾಗೂ ಚಾಕುಗಳನ್ನು ಹಿಡಿದು ಪರಸ್ಪರ ದಾಳಿ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.&lt;/p&gt;&lt;img&gt;&lt;p&gt;ಈ ಘಟನೆಯ ಬಗ್ಗೆ ವಧು ಗುಲ್ನಾಜ್ ಭಾನು ಹಾಗೂ ಆಕೆಯ ತಮ್ಮ ಅನ್ವರ್ ಪಾಷಾ ಗಂಭೀರ ಆರೋಪ ಮಾಡಿದ್ದಾರೆ. 'ನಾವು ಚಿನ್ನಾಭರಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ಇಬ್ಬರೂ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ವರನ ಕಡೆಯವರು ಬೈಕ್ ಬದಲು 15 ಲಕ್ಷ ರೂಪಾಯಿ ಬೆಲೆಬಾಳುವ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದ ಕಾರಣ ನಾವು ಮದುವೆ ಬೇಡ ಎಂದು ನಿರ್ಧರಿಸಿದ್ದೆವು. ಆದರೆ ಅವರು ಮಾತುಕತೆಗೆಂದು ಬಂದು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ' ಎಂದು ವಧುವಿನ ಕಡೆಯವರು ದೂರಿದ್ದಾರೆ.&lt;/p&gt;&lt;img&gt;&lt;p&gt;ಮದುವೆ ಮುರಿದು ಬಿದ್ದಿರುವುದು ಮಾತ್ರವಲ್ಲದೆ, ಬೀದಿಯಲ್ಲಿ ಹೊಡೆದಾಟ ನಡೆಸಿದ ಈ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ಆತಂಕ ಮೂಡಿಸಿದೆ. ಸದ್ಯ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪ್ರೀತಿಯ ಮದುವೆಯು ಕಾರು ಮತ್ತು ಚಿನ್ನದ ಆಸೆಗೆ ಬಲಿಯಾಗಿ, ರಕ್ತಪಾತದಲ್ಲಿ ಅಂತ್ಯಗೊಂಡಿರುವುದು ವಿಷಾದನೀಯ.&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chamarajanagar-kollegala-wedding-house-violence-knife-stabbing-5-injured-sat-p09g7es"/>
        </item>
        <item>
            <title><![CDATA[ರಾಜ್ಯಾದ್ಯಂತ ಟ್ರೆಕ್ಕಿಂಗ್ ಬ್ಯಾನ್ ಮಾಡಿದ ಸರ್ಕಾರ; ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆಗೆ ಬಾಲಕ ಬಲಿ ಬೆನ್ನಲ್ಲೇ ಆದೇಶ!]]></title>
            <link>https://kannada.asianetnews.com/state/karnataka-govt-forest-department-bans-trekking-after-leopard-attack-nagamale-forest-news-sat/articleshow-pfgswim</link>
            <guid isPermaLink="true">https://kannada.asianetnews.com/state/karnataka-govt-forest-department-bans-trekking-after-leopard-attack-nagamale-forest-news-sat/articleshow-pfgswim</guid>
            <pubDate>Tue, 12 May 2026 17:21:23 +0530</pubDate>
            <description><![CDATA[ಚಾಮರಾಜನಗರದ ಎಂ.ಎಂ. ಹಿಲ್ಸ್ ಬಳಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಯ ನಂತರ, ರಾಜ್ಯ ಅರಣ್ಯ ಇಲಾಖೆಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕದಾದ್ಯಂತ ಎಲ್ಲಾ ಚಾರಣ ಪಥಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr9dztfkyh46fqqs4bk1769q,imgname-leopard-kills-child-mm-hills-1778433124851.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಚಾಮರಾಜನಗರ (ಮೇ 12): ರಾ&lt;/strong&gt;ಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವು ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಎಂ.ಎಂ. ಹಿಲ್ಸ್ (ಮಲೆ ಮಹದೇಶ್ವರ ಬೆಟ್ಟ) ವನ್ಯಜೀವಿ ವಿಭಾಗದ ನಾಗಮಲೆ ಅರಣ್ಯ ಪ್ರದೇಶದಲ್ಲಿ 10 ವರ್ಷದ ಬಾಲಕನೊಬ್ಬ ಚಿರತೆ ದಾಳಿಗೆ ಬಲಿಯಾದ ಬೆನ್ನಲ್ಲೇ, ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ರಾಜ್ಯಾದ್ಯಂತ ಎಲ್ಲಾ ಚಾರಣ ಪಥಗಳನ್ನು (Trekking Routes) ತಕ್ಷಣದಿಂದಲೇ ಸ್ಥಗಿತಗೊಳಿಸಿ ಅಧಿಕೃತ ಸುತ್ತೋಲೆ ಹೊರಡಿಸಿದೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ದಿನಾಂಕ 10-05-2026 ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು 10 ವರ್ಷದ ಬಾಲಕನ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡಿತ್ತು. ಈ ಭೀಕರ ಘಟನೆಯಲ್ಲಿ ಬಾಲಕ ಮೃತಪಟ್ಟಿದ್ದು, ಸ್ಥಳೀಯರಲ್ಲಿ ಹಾಗೂ ಪ್ರವಾಸಿಗರಲ್ಲಿ ತೀವ್ರ ಆತಂಕ ಮೂಡಿಸಿತ್ತು. ಅರಣ್ಯ ಪ್ರದೇಶಗಳಲ್ಲಿ ಸಾರ್ವಜನಿಕರ ಸಂಚಾರ ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆ ಎದ್ದಿತ್ತು.&lt;/p&gt;&lt;h2&gt;&lt;strong&gt;ಸಚಿವ ಈಶ್ವರ ಬಿ ಖಂಡ್ರೆ ಸೂಚನೆ:&lt;/strong&gt;&lt;/h2&gt;&lt;p&gt;ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ ಅವರು, ಸಾರ್ವಜನಿಕರ ಪ್ರಾಣ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಹಠಾತ್ ಸುತ್ತೋಲೆ ಹೊರಡಿಸಿ, ರಾಜ್ಯದ ಎಲ್ಲಾ ವನ್ಯಜೀವಿ ಸಂಚಾರವಿರುವ ಪ್ರದೇಶಗಳಲ್ಲಿ ಚಟುವಟಿಕೆಗಳನ್ನು ಬಂದ್ ಮಾಡಲು ಆದೇಶಿಸಿದ್ದಾರೆ.&lt;/p&gt;&lt;h2&gt;&lt;strong&gt;ಅರಣ್ಯ ಇಲಾಖೆಯ ಸುತ್ತೋಲೆಯಲ್ಲಿ ಏನಿದೆ?&lt;/strong&gt;&lt;/h2&gt;&lt;p&gt;&lt;strong&gt;ಅರಣ್ಯ ಇಲಾಖೆ ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ:&lt;/strong&gt;&lt;/p&gt;&lt;p&gt;&lt;strong&gt;ಚಾರಣ ಸ್ಥಗಿತ: &lt;/strong&gt;ಚಿರತೆ, ಹುಲಿ, ಆನೆ, ಕರಡಿ ಸೇರಿದಂತೆ ವನ್ಯಜೀವಿಗಳ ಸಂಚಾರವಿರುವ ಎಲ್ಲಾ ಚಾರಣ ಪಥ ಮತ್ತು ಸಂಚಾರ ಪಥಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.&lt;/p&gt;&lt;p&gt;&lt;strong&gt;ಸುರಕ್ಷತಾ ಕ್ರಮಗಳು: &lt;/strong&gt;ಮಾನವ-ವನ್ಯಜೀವಿ ಸಂಘರ್ಷ ಸಂಭವಿಸಿರುವ ಕಡೆಗಳಲ್ಲಿ ಸಾರ್ವಜನಿಕರ ಮತ್ತು ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.&lt;/p&gt;&lt;p&gt;&lt;strong&gt;SOP ಪಾಲನೆ ಕಡ್ಡಾಯ: &lt;/strong&gt;ಅರಣ್ಯ ಪ್ರದೇಶಗಳಲ್ಲಿ ಚಾರಣ ಚಟುವಟಿಕೆ ನಡೆಸಲು ಈಗಾಗಲೇ ನಿಗದಿಪಡಿಸಲಾಗಿರುವ 'ಪ್ರಮಾಣಿತ ಕಾರ್ಯ ವಿಧಾನ' (SOP) ಅಡಿಯಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವವರೆಗೆ ಯಾವುದೇ ಚಾರಣಕ್ಕೆ ಅವಕಾಶವಿಲ್ಲ.&lt;/p&gt;&lt;p&gt;&lt;strong&gt;ಮರುಪರಿಶೀಲನೆ:&lt;/strong&gt; ಸಂಬಂಧಪಟ್ಟ ವಿಭಾಗಾಧಿಕಾರಿಗಳು ಅರಣ್ಯ ಪ್ರದೇಶಗಳಲ್ಲಿ ಸುರಕ್ಷತಾ ಸಿದ್ಧತೆಗಳನ್ನು ಮಾಡಿಕೊಂಡು, ಪ್ರಮಾಣಪತ್ರ ಸಲ್ಲಿಸಿದ ನಂತರವಷ್ಟೇ ಚಾರಣ ಪುನರಾರಂಭದ ಬಗ್ಗೆ ನಿರ್ಧರಿಸಲಾಗುವುದು.&lt;/p&gt;&lt;h2&gt;&lt;strong&gt;ಚಾರಣಿಗರಿಗೆ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಕರ್ನಾಟಕದ ಪಶ್ಚಿಮ ಘಟ್ಟಗಳು ಮತ್ತು ಮಲೆನಾಡು ಭಾಗದ ಕಾಡುಗಳಿಗೆ ಚಾರಣ ಹೋಗುವ ಯುವಕರು ಮತ್ತು ಚಾರಣಿಗರಿಗೆ ಈ ಆದೇಶ ದೊಡ್ಡ ಹೊಡೆತ ನೀಡಿದೆ. ಆದರೆ, ಪ್ರಾಣಾಪಾಯ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಈ ಕಠಿಣ ಕ್ರಮ ಕೈಗೊಂಡಿದೆ. ಬಂಡೀಪುರ, ನಾಗರಹೊಳೆ, ಬಿ.ಆರ್.ಟಿ, ಭದ್ರಾ ಮತ್ತು ಕಾಳಿ ಹುಲಿ ಸಂರಕ್ಷಿತ ಪ್ರದೇಶಗಳೂ ಸೇರಿದಂತೆ ಎಲ್ಲಾ ವನ್ಯಜೀವಿ ವಿಭಾಗಗಳಿಗೆ ಈ ಆದೇಶ ಅನ್ವಯವಾಗಲಿದೆ.&lt;/p&gt;&lt;p&gt;ಮುಂದಿನ ಆದೇಶದವರೆಗೆ ಯಾವುದೇ ಅರಣ್ಯ ಪ್ರದೇಶಗಳಲ್ಲಿ ಅನಧಿಕೃತವಾಗಿ ಅಥವಾ ಈ ಹಿಂದೆ ಅನುಮತಿ ಪಡೆದಿದ್ದರೂ ಚಾರಣ ಮಾಡುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ವನ್ಯಜೀವಿಗಳ ದಾಳಿಯಿಂದ ಸಾರ್ವಜನಿಕರನ್ನು ರಕ್ಷಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಜನರು ಈ ನಿರ್ಧಾರಕ್ಕೆ ಸಹಕರಿಸಬೇಕೆಂದು ಕೋರಲಾಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-govt-forest-department-bans-trekking-after-leopard-attack-nagamale-forest-news-sat/articleshow-pfgswim"/>
        </item>
        <item>
            <title><![CDATA[ತಾಯಿ ಕಣ್ಮರೆ: ಬಂಡೀಪುರದಲ್ಲಿ ಅನಾಥ ಹುಲಿ ಮರಿಗಳ ಅದ್ಭುತ ಬದುಕಿನ ರೋಚಕ ಕಥೆ ಇಲ್ಲಿದೆ!]]></title>
            <link>https://kannada.asianetnews.com/karnataka-districts/bandipur-tiger-cubs-survival-without-mother-forest-department-gvd/articleshow-q1sr1zu</link>
            <guid isPermaLink="true">https://kannada.asianetnews.com/karnataka-districts/bandipur-tiger-cubs-survival-without-mother-forest-department-gvd/articleshow-q1sr1zu</guid>
            <pubDate>Wed, 06 May 2026 19:05:50 +0530</pubDate>
            <description><![CDATA[&lt;p&gt;ಅದು ನಾಲ್ಕು ಮರಿಗಳನ್ನು ಹೊಂದಿದ್ದ ತಾಯಿ ಹುಲಿ. ಅದೇನಾಯ್ತೋ ಏನೋ ಇದ್ದಕ್ಕಿದ್ದಂತೆ ಒಂದು ದಿನ ಮರಿಗಳನ್ನು ಬಿಟ್ಟು ಕಣ್ಮರೆ ಆಯ್ತು. ತಾಯಿ ಇಲ್ಲದೆ ಅನಾಥವಾದ ನಾಲ್ಕುಹುಲಿ ಮರಿಗಳನ್ನು ಅರಣ್ಯ ಇಲಾಖೆಯಿಂದ..&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqyqy1v1vekkrwc1j148qahy,imgname-cjjk-1778074453857.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಮೇ.06): &lt;/strong&gt;ಅದು ನಾಲ್ಕು ಮರಿಗಳನ್ನು ಹೊಂದಿದ್ದ ತಾಯಿ ಹುಲಿ. ಅದೇನಾಯ್ತೋ ಏನೋ ಇದ್ದಕ್ಕಿದ್ದಂತೆ ಒಂದು ದಿನ ಮರಿಗಳನ್ನು ಬಿಟ್ಟು ಕಣ್ಮರೆ ಆಯ್ತು. ತಾಯಿ ಇಲ್ಲದೆ ಅನಾಥವಾದ ನಾಲ್ಕುಹುಲಿ ಮರಿಗಳನ್ನು ಅರಣ್ಯ ಇಲಾಖೆಯಿಂದ ಯಾವುದೇ ಹಸ್ತಕ್ಷೇಪ ಮಾಡದೆ ಸ್ವಾಭಾವಿಕವಾಗಿ ಸಂರಕ್ಷಿಸಿ, ಸ್ವತಂತ್ರವಾಗಿ ಬದುಕುವಂತೆ ಮಾಡಿರುವ ಯಶೋಗಾಥೆ ಇಲ್ಲಿದೆ.&lt;/p&gt;&lt;p&gt;ಬಂಡೀಪುರ... ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ತಾಣ. ಪ್ರಸ್ತುತ 200ಕ್ಕು ಹೆಚ್ಚು ಹುಲಿಗಳಿರುವ ಈ ಅರಣ್ಯದಲ್ಲಿ ವರ್ಷದಿಂದ ವರ್ಷಕ್ಕೆ ಹುಲಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇಲ್ಲಿನ ಸಫಾರಿ ವಲಯದಲ್ಲಿ ತಾಯಿ ಹುಲಿಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಸ್ವಚ್ಚಂದವಾಗಿ ವಿಹರಿಸುತ್ತಿರುವ ಚೇತೋಹಾರಿ ದೃಶ್ಯ ಕಂಡು ಬಂದಿತ್ತು. ಆದರೆ ಕೆಲ ದಿನಗಳ ನಂತರ ತಾಯಿ ಹುಲಿ ಕುಂಟುತ್ತಿರುವ ಸ್ಥಿತಿಯಲ್ಲಿ ಕಂಡು ಬಂದು ಆತಂಕ ಮೂಡಿಸಿತ್ತು.&lt;/p&gt;&lt;p&gt;ಅದಾದ ಕೆಲ ದಿನಗಳ ನಂತರ ತಾಯಿ ಹುಲಿ ಇದ್ದಕ್ಕಿದ್ದಂತೆ ಕಣ್ಮರೆ ಆಗಿ ಅದರ ನಾಲ್ಕು ಮರಿಗಳು ಅನಾಥವಾದವು. ಒಂದೆಡೆ ತಾಯಿಯ ಎದೆ ಹಾಲೂ ಇಲ್ಲ ಇನ್ನೊಂದೆಡೆ ಬೇಟೆ ಆಡುವ ಕಲೆಯನ್ನು ಸಂಪೂರ್ಣವಾಗಿ ಅರಿಯದ ಈ ಕಂದಮ್ಮಗಳು ಅಕ್ಷರಶಃ ತಬ್ಬಲಿಗಳಾಗಿದ್ದವು. ಈ ವೇಳೆ ಅರಣ್ಯ ಇಲಾಖೆ &zwnj;&zwnj;ಮರಿಹುಲಿಗಳನ್ನು ಸೆರೆ ಹಿಡಿದು ಮೃಗಾಲಯಕ್ಕೋ ಅಥವಾ ಪುನರ್ವಸತಿ ಕೇಂದ್ರಕ್ಕೋ ಸ್ಥಳಾಂತರ ಮಾಡಿದ್ದರೆ ನಾಲ್ಕೂ ಮರಿ ಹುಲಿಗಳು ಬದುಕಿ ಉಳಿಯುವ ಸಾಧ್ಯತೆ ತೀರಾ ಕಡಿಮೆ ಇತ್ತು.&lt;/p&gt;&lt;p&gt;ಈ ನಾಲ್ಕು ಮರಿ ಹುಲಿಗಳನ್ನು ಉಳಿಸುವುದು ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಗಟ್ಟಿ ನಿರ್ಧಾರ ಮಾಡಿದ ಬಂಡೀಪುರ ಅರಣ್ಯಾಧಿಕಾರಿಗಳು ನಾಲ್ಕೂ ಮರಿಹುಲಿಗಳನ್ನು ಅವುಗಳು ಇರುವ ಸ್ಥಳದಲ್ಲಿಯೇ ಸಂರಕ್ಷಣೆ ಮಾಡಲು ತೀರ್ಮಾನಿಸಿದರು. ಈ ಮರಿಗಳು ಇರುವ ಪ್ರದೇಶದಲ್ಲಿ ಸಫಾರಿ ಸ್ಥಗಿತಗೊಳಿಸಿದರು. ನಿರಂತರ ಎಂಟು ತಿಂಗಳ ಕಾಲ ಪ್ರತಿದಿನ ಕ್ಯಾಮೆರಾ ಟ್ರ್ಯಾಪ್ ಹಾಗು ಥರ್ಮಲ್ ಡ್ರೋನ್ ಮೂಲಕ ಮರಿಹುಲಿಗಳ ಚಲನ ವಲನಗಳ ಬಗ್ಗೆ ಗಮನ ಕೇಂದ್ರೀಕರಿಸಿದರು.&lt;/p&gt;&lt;h2&gt;&lt;strong&gt;ಬೇಟೆಯಾಡುವ ಕಲೆ ಕರಗತ&lt;/strong&gt;&lt;/h2&gt;&lt;p&gt;ಬೇರೆ ಹುಲಿಗಳು ಹಾಗು ಚಿರತೆಗಳಿಂದ ಮರಿ ಹುಲಿಗಳಿಗೆ ಅಪಾಯವಾಗದಂತೆ ಸೀಮಿತ ಸಂಖ್ಯೆಯ ಅರಣ್ಯ ಸಿಬ್ಬಂದಿಯಿಂದ ನಿಗಾ ವಹಿಸಲಾಯ್ತು. ಮರಿ ಹುಲಿಗಳು ನಿಧಾನವಾಗಿ ಬೇಟೆಯಾಡುವ ಕಲೆ ಕರಗತ ಮಾಡಿಕೊಂಡವು. ತಮ್ಮ ಆಹಾರವನ್ನು ತಾವೇ ಹುಡುಕಿಕೊಂಡು ಇದೀಗ ಸ್ವತಂತ್ರವಾಗಿ ಬದುಕುವ ಮಟ್ಟಕ್ಕೆ ಬೆಳೆದಿವೆ. ಒಂದು ಹುಲಿ ಈಗಾಗಲೇ ಬೇರ್ಪಟ್ಟಿದ್ದು ಉಳಿದ ಮೂರು ಹುಲಿಗಳು ತಮ್ಮದೆ ಆದ ಟೆರಿಟೆರಿ ಗುರ್ತಿಸಿಕೊಳುವ ಮಟ್ಟಕ್ಕೆ ಬೆಳೆದುನಿಂತಿವೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಫ್ರಭಾಕರನ್ ಮಾಹಿತಿ ಹಂಚಿಕೊಂಡಿದ್ದಾರೆ.&lt;/p&gt;&lt;p&gt;ತಾಯಿ ಹುಲಿ ಅನಾರೋಗ್ಯದಿಂದ ಅಥವಾ ಬೇರೆ ಹುಲಿಯೊಂದಿಗೆ ಕಾದಾಟದಲ್ಲಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದೇನೆ ಇರಲಿ ತಾಯಿ ಇಲ್ಲದೆ ಅನಾಥವಾಗಿದ್ದ ಮರಿಹುಲಿಗಳಿಗೆ ಹೊರಗಿನಿಂದ ಯಾವುದೇ ಆಹಾರ ನೀಡದೆ, ಹೆಚ್ವು ಹಸ್ತಕ್ಷೇಪ ಮಾಡದೆ ಸ್ವಾಭಾವಿಕ ರೀತಿಯಲ್ಲೇ ಸಂರಕ್ಷಿಸಿರುವುದು ದೇಶದಲ್ಲೇ ಮಾದರಿ ಎನಿಸಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bandipur-tiger-cubs-survival-without-mother-forest-department-gvd/articleshow-q1sr1zu"/>
        </item>
        <item>
            <title><![CDATA[ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬೆಂಗಳೂರು ಬಾಲಕ ಬಲಿಯಾಗಲು ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ!]]></title>
            <link>https://kannada.asianetnews.com/karnataka-districts/leopard-attack-in-male-mahadeshwara-hills-boy-death-sparks-outrage-forest-department-faces-negligence-allegations-gdp/articleshow-rl48v6n</link>
            <guid isPermaLink="true">https://kannada.asianetnews.com/karnataka-districts/leopard-attack-in-male-mahadeshwara-hills-boy-death-sparks-outrage-forest-department-faces-negligence-allegations-gdp/articleshow-rl48v6n</guid>
            <pubDate>Sun, 10 May 2026 15:55:43 +0530</pubDate>
            <description><![CDATA[ಮಲೆ ಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ವೇಳೆ ಚಿರತೆ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದಾನೆ. ಈ ದುರ್ಘಟನೆಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಭಕ್ತರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr8ppq903cpjp9911w2vdw4w,imgname-leopard-attack-in-mm-hills--1--1778408709408.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಾಮರಾಜನಗರ: &lt;/strong&gt;ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಪಾದಯಾತ್ರೆ ವೇಳೆ ಚಿರತೆ ದಾಳಿಗೆ ಬಾಲಕ ಬಲಿಯಾದ ದುರ್ಘಟನೆ ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಳಿಕ ಮೃತ ಬಾಲಕನ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ದುರ್ಘಟನೆ ನಡೆಯಲು ಅರಣ್ಯ ಇಲಾಖೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.&lt;/p&gt;&lt;h2&gt;ಅರಣ್ಯ ಇಲಾಖೆಯ ನಿರ್ಲಕ್ಷ್ಯ ಆರೋಪ&lt;/h2&gt;&lt;p&gt;ನಾಗಮಲೆಗೆ ತೆರಳುವ ಪಾದಯಾತ್ರಿಗಳಿಗೆ ಅರಣ್ಯ ಇಲಾಖೆ ತಲಾ ₹200 ಶುಲ್ಕವನ್ನು ನಿಗದಿ ಮಾಡಿದೆ. ಈ ಶುಲ್ಕವನ್ನು ಪಾವತಿಸುವ ಭಕ್ತರಿಗೆ ಅರಣ್ಯ ಸಿಬ್ಬಂದಿ ಸುರಕ್ಷತೆ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂಬ ನಿಯಮವಿದೆ. ಆದರೆ, ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಜೊತೆಗೆ ಪಾದಯಾತ್ರಿಗಳಿಗೆ ಯಾವುದೇ ರಕ್ಷಣಾ ವ್ಯವಸ್ಥೆ ಒದಗಿಸದೇ, &amp;nbsp;ಜೊತೆಯಲ್ಲಿ ಯಾವುದೇ ಸಿಬ್ಬಂದಿಗಳು ಕೂಡ ಇರದೆ. ಪ್ರಾಣಿಗಳಿವೆ ಎಚ್ಚರಿಕೆ ಇಂದಿರಿ ಎಂಬ ನಾಮಫಲಕವನ್ನೂ ಹಾಕದೆ. ಕನಿಷ್ಠ ಕಾಡು ಪ್ರಾಣಿಗಳ ಸಂಚಾರದ ಬಗ್ಗೆ ಮಾಹಿತಿಯನ್ನೂ ನೀಡದೆ ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ಮತ್ತು ಜೊತೆಯಲ್ಲಿದ್ದವರು ಗಂಭೀರ ಆರೋಪ ಮಾಡಿದ್ದಾರೆ.&lt;/p&gt;&lt;h2&gt;ಸುರಕ್ಷತಾ ಕ್ರಮಗಳ ಕೊರತೆ&lt;/h2&gt;&lt;p&gt;ಮಹದೇಶ್ವರ ಬೆಟ್ಟದಿಂದ ನಾಗಮಲೆಯತ್ತ ಹೋಗುವ ಮಾರ್ಗವು ದಟ್ಟ ಅರಣ್ಯ ಪ್ರದೇಶವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿದೆ. ಇಂತಹ ಅಪಾಯಕರ ಮಾರ್ಗದಲ್ಲಿ ಪಾದಯಾತ್ರೆ ಮಾಡುವ ಭಕ್ತರಿಗೆ ಸೂಕ್ತ ಭದ್ರತೆ ಕಲ್ಪಿಸುವುದು ಅತ್ಯವಶ್ಯಕವಾಗಿದ್ದರೂ, ಅದು ಸರಿಯಾಗಿ ಜಾರಿಯಾಗಿಲ್ಲ ಎಂಬುದು ಈ ಘಟನೆ ನಂತರ ಬಹಿರಂಗವಾಗಿದೆ.&lt;/p&gt;&lt;h2&gt;ಶಾಸಕ ಮಂಜುನಾಥ್ ಪ್ರತಿಕ್ರಿಯೆ&lt;/h2&gt;&lt;p&gt;ಈ ದುರ್ಘಟನೆ ಕುರಿತು ಹನೂರು ಕ್ಷೇತ್ರದ ಶಾಸಕ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದು, ಬಾಲಕನ ಸಾವಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಳಗಿನ ವೇಳೆಯಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚು ಇರುತ್ತದೆ. ನಡೆಯಬಾರದ ಘಟನೆ ನಡೆದಿದೆ. ಭಕ್ತರ ಸುರಕ್ಷತೆ ನಮ್ಮ ಆದ್ಯತೆ ಎಂದು ತಿಳಿಸಿದರು.&lt;/p&gt;&lt;p&gt;ಹೆಚ್ಚು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾತನಾಡಿದ ಶಾಸಕ ಮಂಜುನಾಥ್, ಪಾದಯಾತ್ರೆ ಮಾಡುವ ಭಕ್ತರಿಗೆ ಅನುಕೂಲವಾಗುವಂತೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ನಾಗಮಲೆಗೆ ಸುರಕ್ಷಿತ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.&lt;/p&gt;&lt;p&gt;ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರದ ವತಿಯಿಂದ ಮಿನಿ ಬಸ್ ವ್ಯವಸ್ಥೆ ಕಲ್ಪಿಸುವ ಯೋಜನೆಯೂ ರೂಪಿಸಲಾಗುತ್ತಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.&lt;/p&gt;&lt;p&gt;ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶಗಳಿಗೆ ಪ್ರತಿದಿನವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಮಾಡುತ್ತಿದ್ದು, ಇಂತಹ ಘಟನೆಗಳು ಅವರಲ್ಲಿ ಭೀತಿ ಹುಟ್ಟಿಸಿವೆ. ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>chamarajnagar</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/leopard-attack-in-male-mahadeshwara-hills-boy-death-sparks-outrage-forest-department-faces-negligence-allegations-gdp/articleshow-rl48v6n"/>
        </item>
        <item>
            <title><![CDATA[ಕೆರೆಗಳಿಗೆ ನೀರು ತುಂಬಿಸುವ ಕೀರ್ತಿ ಶಾಸಕ ಗಣೇಶ್‌ ಪ್ರಸಾದ್‌ಗೆ ಸಲ್ಲಲಿ: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils</link>
            <guid isPermaLink="true">https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils</guid>
            <pubDate>Wed, 22 Apr 2026 21:22:56 +0530</pubDate>
            <description><![CDATA[&lt;p&gt;ಗುಂಡ್ಲುಪೇಟೆ ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjh6cdyp4ctd2hcjcaa601pg,imgname-cm-siddaramaiah--1772251133910.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗುಂಡ್ಲುಪೇಟೆ (ಏ.22):&lt;/strong&gt; ತಾಲೂಕಿನ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಕೀರ್ತಿ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj;ಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.&lt;/p&gt;&lt;p&gt;ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬಂಧ ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ನನಗೆ ಹಾಗೂ ಡಿಸಿಎಂಗೆ ಮನವಿ ಮಾಡಿದ್ದರು ಎಂದರು. ಗಣೇಶ್&zwnj; ಪ್ರಸಾದ್&zwnj; ಮೂರು ವರ್ಷದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಒಬ್ಬ ಉತ್ತಮ ಶಾಸಕ ಎಂದು ಹೆಸರು ಪಡೆದಿದ್ದಾರೆ, ಮಹದೇವ ಪ್ರಸಾದ್&zwnj; ಅವರ ರೀತಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;&lt;p&gt;ಶಾಸಕ ಗಣೇಶ್&zwnj; ಪ್ರಸಾದ್&zwnj; ಅಭಿವೃದ್ಧಿ ಕೆಲಸ ತರಲು ಉತ್ಸಾಹಿಯಾಗಿದ್ದಾರೆ. ನಮ್ಮ ಸರ್ಕಾರ ಕೂಡ ನಿಮ್ಮ ಉತ್ಸಾಹಕ್ಕೆ ಪ್ರೋತ್ಸಾಹಿಸುತ್ತದೆ ಹಾಗೂ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು.ಬೇರೆ ಮಾತನಾಡಲ್ಲ: ಶಾಸಕ ಎಚ್.ಎಂ.ಗಣೇಶ್&zwnj; ಪ್ರಸಾದ್&zwnj; ನನ್ನ ಭೇಟಿಯಾದಾಗಲೆಲ್ಲ ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಮಾತನಾಡುತ್ತಾರೆ. ಕ್ಷೇತ್ರದ ಜನರ ಆಶೀರ್ವಾದ ಸದಾ ಗಣೇಶ್&zwnj; ಪ್ರಸಾದ್&zwnj; ಮೇಲೆ ಇರಲಿ ಎಂದರು.&lt;/p&gt;&lt;h2&gt;&lt;strong&gt;ಕಾರ್ಯಕರ್ತರ ಗದರಿದ ಸಿಎಂ!&lt;/strong&gt;&lt;/h2&gt;&lt;p&gt;ಪಟ್ಟಣದಲ್ಲಿ ನಡೆದ 110 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಲು ಬಂದಾಗ, ಕೆಲ ಕಾರ್ಯಕರ್ತರು ವೇದಿಕೆಯಿಂದ ನಿರ್ಗಮಿಸುತ್ತಿದ್ದದ್ದನ್ನು ಕಂಡ ಮುಖ್ಯಮಂತ್ರಿಗಳು ಕಾರ್ಯಕರ್ತರನ್ನು ಗದರಿ ಕೂರಿಸಿದ ಘಟನೆ ನಡೆಯಿತು. ನಾವೇನು ತಮಾಷೆಗೆ ಬಂದಿದ್ದೀವಾ? ಶಾಸಕ ಗಣೇಶ್&zwnj; ಪ್ರಸಾದ್&zwnj; ಸಮಾರಂಭ ಆಯೋಜಿಸಿದ್ದಾರೆ. ಸಮಾರಂಭಕ್ಕೆ ಬಂದ್ಮೇಲೆ ನಮ್ಮ ಮಾತು ಕೇಳಬೇಕು ಎಂದರಲ್ಲದೆ, ಕಾಂಗ್ರೆಸ್&zwnj; ಕಾರ್ಯಕರ್ತರು ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದು ಸೂಚಿಸಿದರು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/gundlupete-lake-water-project-siddaramaiah-ganesh-prasad-gvd/articleshow-sdagils"/>
        </item>
        <item>
            <title><![CDATA[ಬಲಗೈಗೆ ಅನ್ಯಾಯವಾದರೆ ಅಧಿಕಾರ ತ್ಯಾಗಕ್ಕೆ ಸಿದ್ಧ: ಸಚಿವ ಎಚ್.ಸಿ.ಮಹದೇವಪ್ಪ]]></title>
            <link>https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr</link>
            <guid isPermaLink="true">https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr</guid>
            <pubDate>Tue, 28 Apr 2026 00:25:05 +0530</pubDate>
            <description><![CDATA[&lt;p&gt;ನನ್ನ 40 ವಷರ್ಗಳ ರಾಜಕಾರಣದಲ್ಲಿ ದಲಿತ ಸಮಾಜದ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಅಂತಹ ಸಮಾಜಕ್ಕೆ ನಾನು ಇರುವ ತನಕ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4rn1zecz4c158wq4pqmxteg,imgname-hc-mahadevappa-1757469015500.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಳ್ಳೇಗಾಲ (ಏ.28): &lt;/strong&gt;ನನ್ನ 40 ವಷರ್ಗಳ ರಾಜಕಾರಣದಲ್ಲಿ ದಲಿತ ಸಮಾಜದ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಅಂತಹ ಸಮಾಜಕ್ಕೆ ನಾನು ಇರುವ ತನಕ ಅನ್ಯಾಯವಾಗಲು ಬಿಡುವುದಿಲ್ಲ. ಒಂದು ವೇಳೆ ಅನ್ಯಾಯವಾದರೆ ನಾನು ಅಧಿಕಾರ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್&zwnj; ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.&lt;/p&gt;&lt;p&gt;ದಲಿತ ಸಮಾಜ ಕ್ಷುಲ್ಲಕ ವಿಚಾರಗಳಿಗಾಗಿ ಗುಂಪು, ಗುಂಪುಗಳಾದರೆ ಶಾಶ್ವತವಾಗಿ ವಿಭಜನೆಯಾಗುತ್ತೀರಿ. ಇದನ್ನರಿತು ಮುಂದೆ ಸಾಗಬೇಕು. ಇತ್ತೀಚಿನ ದಿನಗಳಲ್ಲಿ ಮತೀಯ ಶಕ್ತಿಗಳು, ಕೋಮುವಾದಿಗಳು ಸಂವಿಧಾನದ ಮೇಲೆ ಸವಾರಿ ಮಾಡುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕಿದೆ. ನಾನು ಸಮಾಜ ಕಲ್ಯಾಣ ಸಚಿವನಾದ ಬಳಿಕ ಸಂಪುಟ ಸಭೆಯಲ್ಲಿ ಸಂವಿಧಾನ ಪೀಠಿಕೆ ಓದಬೇಕೆಂಬ ನಿರ್ಣಯ ಪ್ರಕಟಿಸಿದ ಬಳಿಕ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ಸಂವಿಧಾನದ ಕೆಂಪು ಪುಸ್ತಕ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.&lt;/p&gt;&lt;p&gt;ಪ್ರಧಾನಮಂತ್ರಿಗಳು, ಸ್ವಾಮೀಜಿಗಳು ಸಹ ಸಂವಿಧಾನಕ್ಕೆ ನಮಿಸುವಂತಾಗಿದೆ ಎಂದರು. ಅಂಬೇಡ್ಕರ್&zwnj; ಅವರು ಸರ್ವಾಧಿಕಾರಿ ಧೋರಣೆ ಸಹಿಸುತ್ತಿರಲಿಲ್ಲ. ಪೋಟೊ ಪೂಜೆ ವಿರೋಧಿಸುತ್ತಿದ್ದರು. ನಮ್ಮ ದೇಶಕ್ಕೆ ಪ್ರಜಾಪ್ರಭುತ್ವ ಬೇಕು ಎಂಬುದನ್ನು ನಿರ್ಧರಿಸಿ ಮಹಾನ್ ಪವಿತ್ರ ಗ್ರಂಥವನ್ನು ದೇಶಕ್ಕೆ ಕೊಡುಗೆ ನೀಡಿದರು. ತುಳಿತಕ್ಕೊಳಗಾದವರ ಮೇಲೆತ್ತಿದ್ದ ಕೀರ್ತಿ ಬಾಬಾ ಸಾಹೇಬರದ್ದು. ಇಂದು ನಾವೆಲ್ಲರೂ ಅಂಬೇಡ್ಕರ್&zwnj; ವಾದಿಗಳ ಬಗ್ಗೆ ಜಾಗೃತಿ ವಹಿಸುವ ಅಗತ್ಯವಿದೆ ಎಂದರು.&lt;/p&gt;&lt;h2&gt;&lt;strong&gt;ಸಂವಿಧಾನ ಕೊಡುಗೆ&lt;/strong&gt;&lt;/h2&gt;&lt;p&gt;ಬಾಬಾ ಸಾಹೇಬರ ಚರಿತ್ರೆ ಓದಿದರೆ ಅವರು ದೇಶ ಪ್ರೇಮದ ಪ್ರತೀಕ ಎಂಬುದು ವೇದ್ಯವಾಗಲಿದೆ. ಅವರು ಯಾರನ್ನು ದ್ವೇಷಿಸಿಲ್ಲ, ವಿರೋಧಿಸಿಯೂ ಇಲ್ಲ. ಸೇಡಿನ ಮನೋಭಾವ ಇರಲಿಲ್ಲ. ಭಾರತ ವೈವಿಧ್ಯತೆಯಲ್ಲಿ ಏಕತೆಯ ದೇಶ ಎಂಬುದನ್ನು ಮನಗಂಡು ಸಂವಿಧಾನ ಕೊಡುಗೆ ನೀಡಿದ್ದಾರೆ. ಅದನ್ನು ಸಂರಕ್ಷಿಸುವ ಗುರುತರ ಹೊಣೆ ನಾವೆಲ್ಲರೂ ಅರಿಯಬೇಕು ಎಂದರು.&lt;/p&gt;&lt;p&gt;ಈ ಸಂದರ್ಭದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿ ಪದಕ ಪಡೆದಿರುವ ಬೆಂಗಳೂರಿನ ಸಿಸಿಬಿ ಪೊಲೀಸ್ ಆಯುಕ್ತ ಎಚ್.ಕೆ. ಮಹಾನಂದ, ವೈದ್ಯಕೀಯ ಪ್ರವೇಶ ಪಡೆದ 6 ವಿದ್ಯಾರ್ಥಿಗಳು, ಪಿಯುಸಿ ಮತ್ತು ಎಸ್&zwnj;ಎಸ್&zwnj;ಎಲ್&zwnj;ಸಿ ಮಕ್ಕಳು, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಮಕ್ಕಳು, ಸರ್ಕಾರಿ ನೌಕರರಿಗೆ ಅಭಿನಂದಿಸಲಾಯಿತು.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hc-mahadevappa-dalit-rights-ambedkar-jayanti-kollegal-gvd/articleshow-sxg3ttr"/>
        </item>
        <item>
            <title><![CDATA[ಈ ಬಾರಿ ಬೇಸಿಗೆಯಲ್ಲಿ ಉತ್ತಮ ಮಳೆ, ಕಾಡ್ಗಿಚ್ಚಿನ ಆತಂಕ ದೂರ: ಪ್ರವಾಸಿಗರ ಕಣ್ಣಿಗಂತೂ ಹಸಿರಿನ ಸಿಂಚನ]]></title>
            <link>https://kannada.asianetnews.com/karnataka-districts/bandipur-forest-green-after-rain-no-fire-threat-kannada-news-gvd/articleshow-t8dnmir</link>
            <guid isPermaLink="true">https://kannada.asianetnews.com/karnataka-districts/bandipur-forest-green-after-rain-no-fire-threat-kannada-news-gvd/articleshow-t8dnmir</guid>
            <pubDate>Sat, 02 May 2026 17:41:41 +0530</pubDate>
            <description><![CDATA[&lt;p&gt;ಬಂಡೀಪುರದಲ್ಲಿ ಈ ವರ್ಷ ಬೆಂಕಿ ಬೀಳುವ ಆತಂಕ ದೂರವಾಗಿದೆ. ಅರಣ್ಯ ಸಿಬ್ಬಂದಿಯ ನಿರಂತರ ಕಾರ್ಯಾಚರಣೆ ಜೊತೆಗೆ ವರುಣ ಕೂಡ ಸಾಥ್ ನೀಡಿದ್ದು, ಇದೀಗ ಬಂಡೀಪುರದಲ್ಲಿ ಹಸಿರು ಚಿಗುರೊಡೆಯುತ್ತಿದ್ದು ಅರಣ್ಯಾಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqm9kmww6c533q01cmxb8mcf,imgname-c-1777723888540.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು. ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಮೇ.02): &lt;/strong&gt;ಬಂಡೀಪುರದಲ್ಲಿ ಈ ವರ್ಷ ಬೆಂಕಿ ಬೀಳುವ ಆತಂಕ ದೂರವಾಗಿದೆ. ಅರಣ್ಯ ಸಿಬ್ಬಂದಿಯ ನಿರಂತರ ಕಾರ್ಯಾಚರಣೆ ಜೊತೆಗೆ ವರುಣ ಕೂಡ ಸಾಥ್ ನೀಡಿದ್ದು, ಇದೀಗ ಬಂಡೀಪುರದಲ್ಲಿ ಹಸಿರು ಚಿಗುರೊಡೆಯುತ್ತಿದ್ದು ಅರಣ್ಯಾಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗಿಡ ಮರಗಳು ಚಿಗುರೊಡೆಯಲಾರಂಭಿಸಿವೆ. ಇಲ್ಲಿ ಎತ್ತ ನೋಡಿದರು ಹಸಿರು ಬೆಟ್ಟ ಗುಡ್ಡಗಳ ಸಾಲು ಕಣ್ಣು ಹಾಯಿಸಿದಷ್ಟು ಹಸಿರು ಕಾನನ, ವನ್ಯಜೀವಿಗಳ ಸ್ವಚ್ಚಂದ ಓಡಾಟ ನೋಡುವುದೇ ಮನಸ್ಸಿಗೆ ಆನಂದ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.&lt;/p&gt;&lt;p&gt;ಬಿಸಿಲಿನ ಬೇಗೆ ಇಂದ ತತ್ತರಿಸಿ ಬಂಡಿಪುರ ಕಾಡು ಇನ್ನೇನು ಒಣಗಲಾರಂಭಿಸಿತು ಅನ್ನೊ ಅಷ್ಟರಲ್ಲಿ ಮಳೆರಾಯನ ಆಗಮನದಿಂದಾಗಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗಿಡ ಮರಗಳು ಚಿಗುರೊಡೆಯಲಾರಂಭಿಸಿವೆ. ಹುಲಿ ಚಿರತೆ ಆನೆ ಜಿಂಕೆ, ಕಡವೆ, ಕರಡಿ ಸೇರಿದಂತೆ ಅಸಂಖ್ಯಾತ ಪ್ರಾಣಿ ಪಕ್ಷಿಗಳ ತಾಣವಾಗಿರುವ ಬಂಡೀಪುರ ಹುಲಿಸಂರಕ್ಷಿತ ಪ್ರದೇಶ 1080 ಚದುರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಪ್ರತಿವರ್ಷ ಬೇಸಿಗೆಯಲ್ಲಿ ಈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬೀಳದಂತೆ ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲು.&lt;/p&gt;&lt;p&gt;ಆಕಸ್ಮಿಕವಾಗಿ ಅಷ್ಟೇ ಅಲ್ಲದೆ ಕಿಡಿಗೇಡಿಗಳು ಬೆಂಕಿ ಹಚ್ಚುವ ಸಾಧ್ಯತೆಗಳು ಇರುವುದರಿಂದ ಬಿರು ಬೇಸಿಗೆಯಲ್ಲಿ ಒಮ್ಮೆ ಬೆಂಕಿ ಬಿದ್ದರೆ ಸಾಕು ನೂರಾರು ಎಕರೆ ಅರಣ್ಯಪ್ರದೇಶ ಸುಟ್ಟು ಭಸ್ಮವಾಗಿಬಿಡುತ್ತದೆ. ಹಾಗಾಗಿ ಇಡೀ ಕಾಡನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ ಇಲ್ಲಿನ ಅರಣ್ಯಾಧಿಕಾರಿಗಳು ಹಾಗು ಸಿಬ್ಬಂದಿ. ಈ ಬಾರಿ ಕಾಡಂಚಿನ 475 ಮಂದಿಯನ್ನು ಫೈರ್ ವಾಚರ್ಸ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಬೆಂಕಿ ಹರಡದಂತೆ 2800 ಕಿಲೋಮೀಟರ್ ಬೆಂಕಿ ರೇಖೆ ನಿರ್ಮಾಣ ಮಾಡಲಾಗಿದೆ.&lt;/p&gt;&lt;h2&gt;&lt;strong&gt;ಯಶಸ್ವಿ ಕಾರ್ಯಾಚರಣೆ&lt;/strong&gt;&lt;/h2&gt;&lt;p&gt;ಥರ್ಮಲ್ ಡ್ರೋನ್, ಇ ಗಸ್ತು ಹಾಗು ವಾಚ್ ಟವರ್ಗಳ ಮೂಲಕ ದಿನದ 24 ಗಂಟೆಯು ನಿರಂತರವಾಗಿ ನಿಗಾ ವಹಿಸಲಾಗಿದೆ. ಆ ಮೂಲಕ ಈ ಕಾಡಿಗೆ ಬೆಂಕಿ ಬೀಳದಂತೆ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಈ ಬಾರಿ ಅರಣ್ಯ ಸಿಬ್ಬಂದಿ ಶ್ರಮಕ್ಕೆ ವರುಣನು ಕೂಡ ಸಾಥ್ ನೀಡಿದ್ದಾನೆ. ಏಪ್ರಿಲ್ ತಿಂಗಳಲ್ಲಿ ಮೂರ್ನಾಲ್ಕು ಬಾರಿ ಮಳೆಯಾಗಿ ಗಿಡಮರಗಳು ಚಿಗುರೊಡೆಯುತ್ತಿವೆ. ನಿಧಾನವಾಗಿ ಹಸಿರು ಆವರಿಸುತ್ತಿದ್ದು ಇದಕ್ಕೆ ಪೂರಕವಾಗಿ ನಿನ್ನೆ ಮೊನ್ನೆ ಬಿದ್ದ ಮಳೆಯು ಮತ್ತಷ್ಟು ಜೀವಕಳೆ ತಂದಿದೆ.&lt;/p&gt;&lt;p&gt;ಬಿಸಿಲ ಬೇಗೆಯಿಂದ ತತ್ತರಿಸಿದ್ದ ಪ್ರಾಣಿ ಪಕ್ಷಿಗಳು ಮಳೆಯಲ್ಲಿ ಮಿಂದೇಳುತ್ತಿವೆ. ಬಂಡೀಪುರದಲ್ಲಿ 13 ವಲಯಗಳಿದ್ದು 284 ಕೆರೆಕಟ್ಟೆಗಳಿವೆ. ಇತ್ತೀಚೆಗೆ ಬಿದ್ದ ಮಳೆ ಕೆರೆಗಳು ಬತ್ತಿಹೋಗದೆ ಇರುವುದಕ್ಕೆ ಸಹಕಾರಿಯಾಗಿದೆ. ಬೋರ್ಗಳಿಗೆ ಸೋಲಾರ್ ಮೋಟಾರ್ ಅಳವಡಿಸಿ 40 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುತ್ತಿದೆ. ಅರಣ್ಯ ಸಿಬ್ಬಂದಿಯ ಪರಿಶ್ರಮ ಹಾಗು ವರುಣನ ಕೃಪೆಯಿಂದಾಗಿ ಬೆಂಕಿ ಬೀಳುವ ಆತಂಕ ದೂರವಾಗಿದೆ.ರಣಬಿಸಿಲಿನ ಪರಿಣಾಮ ಒಣಗಿದ್ದ ಈ ಅರಣ್ಯದಲ್ಲೀಗ ಮರಗಿಡಗಳು ಚಿಗುರೊಡೆಯುತ್ತಿದ್ದು ಹಸಿರು ಆವರಿಸತೊಡಗಿದೆ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bandipur-forest-green-after-rain-no-fire-threat-kannada-news-gvd/articleshow-t8dnmir"/>
        </item>
        <item>
            <title><![CDATA[ಚಾಮರಾಜನಗರದ ಚತುರ ಸವಾರ! ಹೆಲ್ಮೆಟ್ ಬದಲು 'ಸೊಪ್ಪು' ಹೊತ್ತು ಸವಾರಿ; ಬಿಸಿಲಿಗೇನೋ ಓಕೆ, ಬಿದ್ರೆ ಗತಿ ಏನು ಸಾಮಿ?]]></title>
            <link>https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk</link>
            <guid isPermaLink="true">https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk</guid>
            <pubDate>Wed, 22 Apr 2026 19:32:52 +0530</pubDate>
            <description><![CDATA[&lt;p&gt;ಚಾಮರಾಜನಗರದಲ್ಲಿ ಬೈಕ್ ಸವಾರನೊಬ್ಬ ಬೇಸಿಗೆಯ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹೆಲ್ಮೆಟ್ ಬದಲಿಗೆ ತಲೆಯ ಮೇಲೆ ಸೊಪ್ಪನ್ನು ಇಟ್ಟುಕೊಂಡು ಸವಾರಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ತಮಾಷೆಯ ಘಟನೆಯು ನೋಡಲು ನಗು ತರಿಸಿದರೂ, ಅಪಘಾತದ ಸಮಯದಲ್ಲಿ ಹೆಲ್ಮೆಟ್&zwnj; ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kptqs2ed3pfrmzfd7b65t1k5,imgname-chamarajanagar-green-helmet-1776866331084.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೇಸಿಗೆಯ ಬಿಸಿಲು ಮನುಷ್ಯನನ್ನು ಏನೆಲ್ಲಾ ಮಾಡಿಸುತ್ತದೆ ಎಂಬುದಕ್ಕೆ ಗಡಿ ಜಿಲ್ಲೆ ಚಾಮರಾಜನಗರದ ಈ ಘಟನೆಯೇ ಸಾಕ್ಷಿ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದ್ದು, ಅದನ್ನು ನೋಡಿದವರು 'ಇವನೊಬ್ಬನೇ ನೋಡಿ ನಿಜವಾದ ಪ್ರಕೃತಿ ಪ್ರೇಮಿ' ಎಂದು ನಗುತ್ತಿದ್ದಾರೆ. ಹೌದು, ಬೈಕ್ ಸವಾರನೊಬ್ಬ ಹೆಲ್ಮೆಟ್ ಬದಲಿಗೆ ತಲೆಯ ಮೇಲೆ ಹಚ್ಚಹಸಿರಾದ ಸೊಪ್ಪನ್ನು (ಗಿಡದ ಟೊಂಗೆಗಳನ್ನು) ಇಟ್ಟುಕೊಂಡು ಸವಾರಿ ಮಾಡಿದ್ದಾನೆ!&lt;/p&gt;&lt;h3&gt;&lt;strong&gt;ಸಂತೇಮರಹಳ್ಳಿ ಸರ್ಕಲ್&zwnj;ನಲ್ಲಿ ಕಂಡ 'ನೈಸರ್ಗಿಕ ಎಸಿ'!&lt;/strong&gt;&lt;/h3&gt;&lt;p&gt;ಚಾಮರಾಜನಗರದ ಸಂತೇಮರಹಳ್ಳಿ ಸರ್ಕಲ್ ಬಳಿ ಈ ದೃಶ್ಯ ಕಂಡುಬಂದಿದೆ. ಜಿಲ್ಲೆಯಲ್ಲಿ ಸೂರ್ಯದೇವ ತನ್ನ ಪ್ರತಾಪ ತೋರುತ್ತಿದ್ದು, ರಸ್ತೆಗಿಳಿಯುವ ಸವಾರರು ಬಿಸಿಲ ಝಳಕ್ಕೆ ಹೈರಾಣಾಗುತ್ತಿದ್ದಾರೆ. ಸಾಮಾನ್ಯವಾಗಿ ಜನ ಟವೆಲ್ ಸುತ್ತಿಕೊಳ್ಳುತ್ತಾರೆ ಅಥವಾ ಕ್ಯಾಪ್ ಹಾಕಿಕೊಳ್ಳುತ್ತಾರೆ. ಆದರೆ ಈ ಮಹಾನುಭಾವ ಒಂದು ಹೆಜ್ಜೆ ಮುಂದೆ ಹೋಗಿ, ರಸ್ತೆ ಬದಿಯ ಗಿಡದಿಂದ ಒಂದಿಷ್ಟು ಸೊಪ್ಪನ್ನು ಕೊಯ್ದು ತಲೆಯ ಮೇಲೆ ಇಟ್ಟುಕೊಂಡು, ಅದರ ಮೇಲೆ ಟೋಪಿ ಧರಿಸಿದ್ದಾನೆ. ನೋಡಲು ಇದು ತಲೆಯ ಮೇಲೆ ಸಣ್ಣದೊಂದು 'ಮೊಬೈಲ್ ಗಾರ್ಡನ್' ಇದ್ದಂತೆ ಕಾಣುತ್ತಿದೆ!&lt;/p&gt;&lt;h2&gt;&lt;strong&gt;ಹಾಸ್ಯದ ಹಿಂದೆ ಇರಲಿ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಈ ವಿಡಿಯೋ ನೋಡಲು ಎಷ್ಟು ತಮಾಷೆಯಾಗಿದೆಯೋ, ಅಷ್ಟೇ ಆತಂಕಕಾರಿಯೂ ಆಗಿದೆ. ಸವಾರ ಕಂಡುಕೊಂಡ ಈ 'ನೈಸರ್ಗಿಕ ಕೂಲಿಂಗ್ ವ್ಯವಸ್ಥೆ' ಬಿಸಿಲಿನಿಂದ ತಲೆಯನ್ನು ತಂಪಾಗಿಡಬಹುದು ನಿಜ. ಆದರೆ, ಒಂದು ವೇಳೆ ಆಕಸ್ಮಿಕವಾಗಿ ಬೈಕ್ ಸ್ಕಿಡ್ ಆದರೆ ಈ 'ಸೊಪ್ಪು' ತಲೆಯನ್ನು ಕಾಪಾಡಬಲ್ಲದೇ? ಎಂಬ ಪ್ರಶ್ನೆ ಮೂಡಿದೆ. ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಕಡ್ಡಾಯ ಮಾಡಿರುವುದು ಬಿಸಿಲಿನಿಂದ ರಕ್ಷಣೆ ಪಡೆಯುವುದಕ್ಕಲ್ಲ, ಬದಲಾಗಿ ಅಪಘಾತವಾದಾಗ ಜೀವ ಉಳಿಸಲಿ ಎಂಬ ಉದ್ದೇಶದಿಂದ.&lt;/p&gt;&lt;h3&gt;&lt;strong&gt;ಸವಾರರಿಗೆ ಕಿವಿಮಾತು:&lt;/strong&gt;&lt;/h3&gt;&lt;p&gt;ಬಿಸಿಲಿನಿಂದ ರಕ್ಷಣೆ ಪಡೆಯಲು ನೀವು ತಲೆ ಮೇಲೆ ಸೊಪ್ಪು ಇಟ್ಟುಕೊಳ್ಳಿ ಅಥವಾ ಐಸ್ ಗಟ್ಟಿ ಇಟ್ಟುಕೊಳ್ಳಿ, ಅದು ನಿಮ್ಮ ವೈಯಕ್ತಿಕ ವಿಚಾರ. ಆದರೆ, ಅದರ ಮೇಲೆ ಐಎಸ್&zwnj;ಐ (ISI) ಮುದ್ರೆ ಇರುವ ಗಟ್ಟಿಮುಟ್ಟಾದ ಹೆಲ್ಮೆಟ್ ಇರುವುದು ಬಹಳ ಮುಖ್ಯ. ಈ 'ಸೊಪ್ಪು ಸವಾರ'ನ ವಿಡಿಯೋ ನೋಡಿ ನಕ್ಕು ಸುಮ್ಮನಾಗಬೇಡಿ. ನೀವು ಹೊರಗೆ ಹೋಗುವಾಗ ಬಿಸಿಲಿಗೆ 'ಛತ್ರಿ' ಜೊತೆಗೆ ಜೀವಕ್ಕೆ 'ಹೆಲ್ಮೆಟ್' ಎಂಬ ಕವಚವನ್ನೂ ಮರೆಯಬೇಡಿ.&lt;/p&gt;&lt;p&gt;ಒಟ್ಟಿನಲ್ಲಿ ಚಾಮರಾಜನಗರದ ಈ 'ನಿಸರ್ಗ ಪ್ರೇಮಿ' ಸವಾರ ಈಗ ಇಂಟರ್ನೆಟ್ ಸೆನ್ಸೇಷನ್ ಆಗಿಬಿಟ್ಟಿದ್ದಾನೆ. ಪೊಲೀಸರ ಕಣ್ಣಿಗೆ ಈ 'ಗ್ರೀನ್ ಹೆಲ್ಮೆಟ್' ಬಿದ್ದರೆ ದಂಡ ಗ್ಯಾರಂಟಿ. ಹಾಗಾಗಿ, ಸಾರ್ವಜನಿಕರೇ, ಬಿಸಿಲಿಗಾಗಿ ಮಾಡುವ ಕಸರತ್ತುಗಳು ನಿಮ್ಮ ಜೀವಕ್ಕೆ ಕಂಟಕವಾಗದಂತೆ ನೋಡಿಕೊಳ್ಳಿ!&lt;/p&gt;]]></content:encoded>
            <category>chamarajnagar</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chamarajanagar-biker-viral-video-wearing-leaves-helmet-on-head-heatwave-sat/articleshow-tb69utk"/>
        </item>
        <item>
            <title><![CDATA[ಚಾಮರಾಜನಗರದಲ್ಲಿ ಲಾರಿ- ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು]]></title>
            <link>https://kannada.asianetnews.com/gallery/karnataka-districts/chamarajanagar-accident-pregnant-woman-and-driver-killed-in-lorry-car-crash-v2l54w4</link>
            <guid isPermaLink="true">https://kannada.asianetnews.com/gallery/karnataka-districts/chamarajanagar-accident-pregnant-woman-and-driver-killed-in-lorry-car-crash-v2l54w4</guid>
            <pubDate>Sun, 03 May 2026 09:23:50 +0530</pubDate>
            <description><![CDATA[&lt;p&gt;ಚಾಮರಾಜನಗರದಲ್ಲಿ ಲಾರಿ- ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು, ಘಟನೆಯಲ್ಲಿ 9 ವರ್ಷದ ಬಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಇಂದು ಬೆಳಗ್ಗೆ ನಡೆದ ಘಟನೆಗೆ ಆತಂಕ ತರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqnzada1x42yggx9jfmh3yfg,imgname-chamarajanagar-accident-1777780208961.png" type="image/jpeg" height="390" width="690"/>
            <content:encoded><![CDATA[&lt;p&gt;ಚಾಮರಾಜನಗರದಲ್ಲಿ ಲಾರಿ- ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು, ಘಟನೆಯಲ್ಲಿ 9 ವರ್ಷದ ಬಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಇಂದು ಬೆಳಗ್ಗೆ ನಡೆದ ಘಟನೆಗೆ ಆತಂಕ ತರಿಸಿದೆ.&lt;/p&gt;&lt;img&gt;&lt;p&gt;ಚಾಮರಾಜನಗರ ಜನ ಮಳೆ, ಬೆಳೆ ಕುರಿತು ಲೆಕ್ಕಾಚಾರದಲ್ಲಿರುವಾಗಲೇ ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಬೆಚ್ಚಿ ಬಿದ್ದಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ-ಕೇರಳ ರಸ್ತೆಯ ಮದ್ದಯ್ಯನಹುಂಡಿ ಬಳಿ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.&lt;/p&gt;&lt;img&gt;&lt;p&gt;ಕೇರಳದಿಂದ ಚಾಮರಾಜನಗರದತ್ತ ಆಗಮಿಸುತ್ತಿದ್ದ ಕಾರಿಗೆ ಕೇರಳದತ್ತ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.&lt;/p&gt;&lt;img&gt;&lt;p&gt;ಕಾರಿನಲ್ಲಿದ್ದ ಒಟ್ಟು ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.&lt;/p&gt;&lt;img&gt;&lt;p&gt;ಅತೀ ವೇಗದ ಚಾಲನೆಯೇ ಅಪಘಾತ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಅತೀ ವೇಗದ ಕಾರಣ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ರಸ್ತೆಯಿಂದ ಇಳಿಜಾರು ಪ್ರದೇಶದಲ್ಲಿ ಬಿದ್ದಿದೆ. ತಕ್ಷಣವೇ ಸ್ಛಳೀಯರು ನೆರವಿಗೆ ಧಾವಿಸಿದ್ದಾರೆ.&lt;/p&gt;&lt;img&gt;&lt;p&gt;ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಕಾರಣ ಭಾರಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಮದ್ದಯ್ಯನಹುಂಡಿ ಬಳಿಕ ಘಟನೆ ಸಂಭವಿಸಿದೆ. ಲಾರಿ ರಸ್ತೆಯ ಅಡ್ಡಲಾಗಿ ನಿಂತಿದ್ದರೆ, ಕಾರು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿತ್ತು.&lt;/p&gt;&lt;h2&gt;ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್&lt;/h2&gt;]]></content:encoded>
            <category>chamarajnagar</category>
            <dc:creator>Chethan Kumar</dc:creator>
            <atom:link href="https://kannada.asianetnews.com/gallery/karnataka-districts/chamarajanagar-accident-pregnant-woman-and-driver-killed-in-lorry-car-crash-v2l54w4"/>
        </item>
        <item>
            <title><![CDATA[ಚಾಮರಾಜನಗರದಲ್ಲಿ ರಣಾಂಗಣವಾದ ಮದುವೆ ಮನೆ: ಚಿನ್ನಾಭರಣ ವಿಚಾರಕ್ಕೆ ಪರಸ್ಪರ ಚಾಕು ಇರಿತ!]]></title>
            <link>https://kannada.asianetnews.com/crime/kollegal-wedding-clash-dowry-fight-stabbing-chamarajanagar-gvd/articleshow-vxescdi</link>
            <guid isPermaLink="true">https://kannada.asianetnews.com/crime/kollegal-wedding-clash-dowry-fight-stabbing-chamarajanagar-gvd/articleshow-vxescdi</guid>
            <pubDate>Wed, 29 Apr 2026 18:38:28 +0530</pubDate>
            <description><![CDATA[&lt;p&gt;ವಧು, ವರ ಎರಡೂ ಕಡೆಯವರು ಚಾಕುವಿನಿಂದ ಪರಸ್ಪರ ಇರಿದುಕೊಂಡಿದ್ದಾರೆ. ಒಬ್ಬರಿಗೊಬ್ಬರು ಬಡಿದಾಡಿಕೊಂಡು ರಕ್ತದ ಕೋಡಿ ಹರಿಸಿದ್ದಾರೆ. ಈ ಘಟನೆ ನಡೆದಿರೋದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqcnn96pxpqhz97c0rzhatvc,imgname-xgh-1777468089558.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪುಟ್ಟರಾಜು.ಆರ್.ಸಿ, ಏಷಿಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ.&lt;/strong&gt;&lt;/p&gt;&lt;p&gt;&lt;strong&gt;ಚಾಮರಾಜನಗರ (ಏ.29): &lt;/strong&gt;ಎಲ್ಲವು ಅಂದುಕೊಂಡಂತೆ ಆಗಿದ್ರೆ ಅವರಿಬ್ಬರು ಇಷ್ಟೊತ್ತಿಗೆ ಸತಿಪತಿಗಳಾಗಬೇಕಿತ್ತು. ಆ ಮನೆಯಲ್ಲಿ ಸಡಗರ ಸಂಭ್ರಮ ಮನೆ ಮಾಡಬೇಕಿತ್ತು. ಆದರೆ ಆ ಮನೆ ರಣಾಂಗಣವಾಗಿದೆ, ಎರಡೂ ಕಡೆಯವರು ಚಾಕುವಿನಿಂದ ಇರಿದು, ಬಡಿದಾಡಿಕೊಂಡು ರಕ್ತದ ಕೋಡಿ ಹರಿದಿದೆ. ಮದುವೆ ಮುರಿದುಬಿದ್ದಿದೆ. Marriages are made in heaven ಅನ್ನೋ ಮಾತಿದೆ. ಆದರೆ ಇಲ್ಲಿ ನಡೆಯಬೇಕಿದ್ದ ಮದುವೆ ಅಕ್ಷರಶಃ ನರಕಮಯವಾಗಿದೆ.&lt;/p&gt;&lt;p&gt;ವಧು, ವರ ಎರಡೂ ಕಡೆಯವರು ಚಾಕುವಿನಿಂದ ಪರಸ್ಪರ ಇರಿದುಕೊಂಡಿದ್ದಾರೆ. ಒಬ್ಬರಿಗೊಬ್ಬರು ಬಡಿದಾಡಿಕೊಂಡು ರಕ್ತದ ಕೋಡಿ ಹರಿಸಿದ್ದಾರೆ. ಈ ಘಟನೆ ನಡೆದಿರೋದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ. ಕೊಳ್ಳೆಗಾಲದ ಮೊಹಮದ್ ಮುದಸಿರ್ ಹಾಗು ಗುಲ್ನಾಜ್ ಬೇಗಂ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಎರಡೂ ಮನೆಯವರ ಒಪ್ಪಿಗೆ ಸಿಕ್ಕಿ ವಿವಾಹವೂ ನಿಶ್ಚಯವಾಗಿತ್ತು. ಮದುವೆ ವೇಳೆ ತಮ್ಮ ಶಕ್ತ್ಯಾನುಸಾರ ಎರಡೂ ಕಡೆಯವರು ಚಿನ್ನಾಭರಣ ಕೊಡುವುದಾಗಿ ಮಾತುಕತೆ ಆಗಿತ್ತು.&lt;/p&gt;&lt;p&gt;ಇಂದು ಕೊಳ್ಳೇಗಾಲದ ಆರ್&zwnj;ಎಂ ಕನ್ವೆವೆನ್ಷನ್ ಹಾಲ್ನಲ್ಲಿ ಇವರಿಬ್ಬರ ನಿಖಾ ನಿಗಧಿಯಾಗಿತ್ತು. ಆದರೆ ಕೊಟ್ಟ ಮಾತಿನಂತೆ ವಧುವಿಗೆ ಕೊಡಬೇಕಿದ್ದ ಚಿನ್ನಾಭರಣ ಕೊಡದ ಹಿನ್ನಲೆಯಲ್ಲಿ ವಧುವಿನ ಮನೆಯವರು ಕಲ್ಯಾಣಮಂಟಪಕ್ಕೆ ಹೋಗಿರಲಿಲ್ಲ. ಈ ಬಗ್ಗೆ ಮಾತುಕತೆ ನಡೆಸಲು ವರನ ಕಡೆಯವರು ವಧುವಿನ ಮನೆಗೆ ಬಂದಿದ್ದಾರೆ. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿಗೆ ಮಾತಿ ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಮದುವೆ ಮನೆ ರಣಾಂಗಣವಾಗಿದೆ. ಪರಸ್ಪರ ಬಡಿದಾಡಿ ಚಾಕು ಇರಿದುಕೊಂಡು ರಕ್ತದೋಕುಳಿ ಆಡಿದ್ದಾರೆ. ಇನ್ನೂ ಯಾಕೆ ಚಿನ್ನ ತಂದಿಲ್ಲ ಅಂತ ವಧುವಿನಮನೆಯವರೇ ಗಲಾಟೆ ಮಾಡಿದ್ರು ಅಂತ ವರನ ಸಂಬಂಧಿಕರು ಆರೋಪಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಬಿಕೋ ಎನ್ನುತ್ತಿದೆ ಕಲ್ಯಾಣ ಮಂಟಪ&lt;/strong&gt;&lt;/h2&gt;&lt;p&gt;ಆದರೆ ನಾವು ಯಾವುದೇ ಚಿನ್ನಾಭರಣಕ್ಕೆ ಒತ್ತಾಯ ಮಾಡಿಲ್ಲ, 15 ಲಕ್ಷ ರೂಪಾಯಿ ಮೌಲ್ಯದ ಕಾರು ಕೊಡಿಸುವಂತೆ ವರನ ಕಡೆಯವರೇ ಡಿಮ್ಯಾಂಡ್ ಮಾಡಿ ಗಲಾಟೆ ಮಾಡಿದ್ರು ಅಂತ ವಧುವಿನ ಕಡೆಯವರು ಆರೋಪಿಸುತ್ತಿದ್ದಾರೆ. ನಿಖಾ ನಡೆದು ನೆಂಟರಿಷ್ಟರಿಂದ ತುಂಬಿತುಳುಕಬೇಕಿದ್ದ ಕಲ್ಯಾಣ ಮಂಟಪ ಬಿಕೋ ಎನ್ನುತ್ತಿದೆ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲಿ ಮೌನ ಆವರಿಸಿದೆ. ಒಟ್ಟಾರೆ ಮದುವೆ ಹಂತಕ್ಕು ಬಂದಿದ್ದ ಅವರಿಬ್ಬರ ಪ್ರೀತಿ ಚಿನ್ನಾಭರಣದ ವಿಷಯಕ್ಕೆ ಮುರಿದುಬಿದ್ದುರುವುದು ಮಾತ್ರ ವಿಪರ್ಯಾಸ.&lt;/p&gt;]]></content:encoded>
            <category>chamarajnagar</category>
            <dc:creator>Govindaraj S</dc:creator>
            <atom:link href="https://kannada.asianetnews.com/crime/kollegal-wedding-clash-dowry-fight-stabbing-chamarajanagar-gvd/articleshow-vxescdi"/>
        </item>
    </channel>
</rss>
