<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 04 Aug 2026 15:04:19 +0530</lastBuildDate>
        <atom:link href="https://kannada.asianetnews.com/rss/chikkamagalur" rel="self" type="application/rss+xml"/>
        <item>
            <title><![CDATA[ಕೆನರಾ ಬ್ಯಾಂಕ್ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ ₹15 ಸಾವಿರಕ್ಕೆ ಕ್ಲೋಸ್! ಮಾನವೀಯತೆ ಮೆರೆದ ನ್ಯಾಯಾಲಯ]]></title>
            <link>https://kannada.asianetnews.com/karnataka-districts/chikkamagaluru-mega-lok-adalat-humanitarian-court-waives-off-8-lakh-canadara-bank-loan-for-disabled-man/articleshow-0wmktt1</link>
            <guid isPermaLink="true">https://kannada.asianetnews.com/karnataka-districts/chikkamagaluru-mega-lok-adalat-humanitarian-court-waives-off-8-lakh-canadara-bank-loan-for-disabled-man/articleshow-0wmktt1</guid>
            <pubDate>Mon, 13 Jul 2026 16:23:21 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ, ತೀವ್ರ ಸಂಕಷ್ಟದಲ್ಲಿದ್ದ ವಿಕಲಚೇತನ ವ್ಯಕ್ತಿಯೊಬ್ಬರ 8 ಲಕ್ಷ ರೂ. ಸಾಲವನ್ನು ಮೆಗಾ ಲೋಕ ಅದಾಲತ್&zwnj;ನಲ್ಲಿ ಇತ್ಯರ್ಥಪಡಿಸಲಾಗಿದೆ. ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ರವೀಂದ್ರ ಹೆಗಡೆಯವರ ಮಾನವೀಯ ಮಧ್ಯಸ್ಥಿಕೆಯಿಂದ, ಬ್ಯಾಂಕ್ ಅಧಿಕಾರಿಗಳ ಸಹಕಾರದೊಂದಿಗೆ ಸಾಲದ ಮೊತ್ತವನ್ನು ಕೇವಲ 15,000 ರೂ.ಗೆ ಇಳಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kxdhe2jknd67xcrkmgs01v04,imgname-chikkamagaluru-loan-judge-order-1783939664467.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಜು.13): ಕಾ&lt;/strong&gt;ನೂನು ಎಂದರೆ ಕೇವಲ ನಿಯಮಗಳಲ್ಲ, ಅದರಾಚೆಗೂ ಮಿಡಿಯುವ ಮಾನವೀಯ ಹೃದಯವಿದೆ ಎಂಬುದನ್ನು ಚಿಕ್ಕಮಗಳೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾಬೀತುಪಡಿಸಿದೆ. ಇತ್ತೀಚೆಗೆ ಆಯೋಜಿಸಲಾಗಿದ್ದ ಮೆಗಾ ಲೋಕ ಅದಾಲತ್&zwnj;ನಲ್ಲಿ ನ್ಯಾಯಾಂಗದ ಪರಮೋಚ್ಚ ಮಾನವೀಯ ನಡೆ ಅನಾವರಣಗೊಂಡಿದ್ದು, ಇಡೀ ಸಮಾಜದ ಮೆಚ್ಚುಗೆಗೆ ಪಾತ್ರವಾಗಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ? ಸಂಕಷ್ಟದಲ್ಲಿದ್ದ ವಿಕಲಚೇತನ&lt;/strong&gt;&lt;/h2&gt;&lt;p&gt;ತೀವ್ರ ದೈಹಿಕ ಅಸಮರ್ಥತೆ ಮತ್ತು ತೀವ್ರ ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿದ್ದ ವಿಕಲಚೇತನ ವ್ಯಕ್ತಿಯೊಬ್ಬರು ಕೆನರಾ ಬ್ಯಾಂಕ್&zwnj;ನಲ್ಲಿ ಸಾಲ ಪಡೆದಿದ್ದರು. ಆದರೆ ಪರಿಸ್ಥಿತಿಯ ಕೈಗೊಂಬೆಯಾಗಿದ್ದ ಅವರಿಗೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಬಡ್ಡಿ ಬೆಳೆಯುತ್ತಾ ಹೋಗಿ ಒಟ್ಟು ಸಾಲದ ಮೊತ್ತ ಬರೋಬ್ಬರಿ 8 ಲಕ್ಷ ರೂಪಾಯಿ ದಾಟಿತ್ತು. ಸಾಲ ವಸೂಲಾತಿಗಾಗಿ ಬ್ಯಾಂಕ್ ನ್ಯಾಯಾಲಯದ ಮೊರೆ ಹೋಗಿತ್ತು. ಇದರಿಂದಾಗಿ ಸಂತ್ರಸ್ತ ಕುಟುಂಬವು ತೀವ್ರ ಕಂಗಾಲಾಗಿತ್ತು.&lt;/p&gt;&lt;h2&gt;&lt;strong&gt;ಸಂತ್ರಸ್ತನ ಬಳಿಗೇ ನಡೆದು ಬಂದ ನ್ಯಾಯಾಧೀಶರು!&lt;/strong&gt;&lt;/h2&gt;&lt;p&gt;ಪ್ರಕರಣದ ಸೂಕ್ಷ್ಮತೆ ಮತ್ತು ಸಾಲಗಾರನ ಕರುಣಾಜನಕ ಪರಿಸ್ಥಿತಿಯನ್ನು ಮನಗಂಡ ಚಿಕ್ಕಮಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರು ಈ ವಿಷಯದಲ್ಲಿ ವಿಶೇಷ ಆಸಕ್ತಿ ವಹಿಸಿ ಸಾಲಗಾರನ ಬಳಿಗೇ ನ್ಯಾಯಾದಾನ ಮಾಡುವುದಕ್ಕೆ ತೀರ್ಮಾನಿಸಿದರು. ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಕಾನೂನು ತಂಡದ ಅಧಿಕಾರಿಗಳೊಂದಿಗೆ ನ್ಯಾಯಾಧೀಶರೇ ನೇರವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಂಭಾಗದ ಕಚೇರಿಗೆ ನಡೆದುಕೊಂಡು ಬಂದರು. ಸಾಲಗಾರನ ಬಳಿಯೇ ನಿಂತು ಸಮಾಲೋಚನೆ ನಡೆಸುವ ಮೂಲಕ ಸರಳತೆ ಮೆರೆದರು.&lt;/p&gt;&lt;h2&gt;&lt;strong&gt;ಕಂಡ 8 ಲಕ್ಷದ ಸಾಲ 15 ಸಾವಿರಕ್ಕೆ ಸುಖಾಂತ್ಯ:&lt;/strong&gt;&lt;/h2&gt;&lt;p&gt;ನ್ಯಾಯಾಧೀಶರ ನೇತೃತ್ವದಲ್ಲಿ ಮಾನವೀಯ ನೆಲೆಯಲ್ಲಿ ನಡೆದ ಈ ಸೌಹಾರ್ದಯುತ ಮಾತುಕತೆಗೆ ಬ್ಯಾಂಕ್ ಅಧಿಕಾರಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದರು. ವಿಕಲಚೇತನರ ಪರಿಸ್ಥಿತಿಗೆ ಮಿಡಿದ ಅಧಿಕಾರಿಗಳು ಬೃಹತ್ ಮೊತ್ತದ ಸಾಲವನ್ನು ಮನ್ನಾ ಮಾಡಲು ಒಪ್ಪಿಗೆ ಸೂಚಿಸಿದರು. ಅಂತಿಮವಾಗಿ ಇಡೀ ಪ್ರಕರಣವು ಕೇವಲ 15,000 ರೂಪಾಯಿ ಪಾವತಿಗೆ ಇತ್ಯರ್ಥವಾಯಿತು. ಕೇವಲ ಹದಿನೈದು ಸಾವಿರ ರೂಪಾಯಿ ಪಡೆದು 8 ಲಕ್ಷಕ್ಕೂ ಅಧಿಕ ಮೊತ್ತದ ಸಾಲವನ್ನು ಕ್ಲೋಸ್ ಮಾಡುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ಹೊಸ ಬದುಕಿನ ಭರವಸೆ ನೀಡಲಾಯಿತು.&lt;/p&gt;&lt;h2&gt;&lt;strong&gt;ಕಣ್ಣೀರು ಒರೆಸುವ ಮಹಾ ವೇದಿಕೆ 'ಲೋಕ ಅದಾಲತ್'&lt;/strong&gt;&lt;/h2&gt;&lt;p&gt;ಲೋಕ ಅದಾಲತ್ ಮತ್ತು ಕಾನೂನು ಸೇವೆಗಳ ಪ್ರಾಧಿಕಾರಗಳು ಕೇವಲ ನ್ಯಾಯಾಲಯದ ಕೇಸ್&zwnj;ಗಳನ್ನು ಇತ್ಯರ್ಥ ಪಡಿಸುವ ಕೇಂದ್ರಗಳಲ್ಲ, ಬದಲಿಗೆ ಅವು ಸಮಾಜದ ಅತ್ಯಂತ ದುರ್ಬಲ ವರ್ಗದವರ ಕಣ್ಣೀರು ಒರೆಸುವ ಮಾನವೀಯತೆಯ ಮಹಾ ವೇದಿಕೆಯಾಗಬಲ್ಲವು ಎಂಬುದಕ್ಕೆ ಈ ಹೃದಯಸ್ಪರ್ಶಿ ಘಟನೆ ಜ್ವಲಂತ ಉದಾಹರಣೆಯಾಗಿದೆ. ನ್ಯಾಯಾಧೀಶರ ಹಾಗೂ ಬ್ಯಾಂಕ್ ಅಧಿಕಾರಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-mega-lok-adalat-humanitarian-court-waives-off-8-lakh-canadara-bank-loan-for-disabled-man/articleshow-0wmktt1"/>
        </item>
        <item>
            <title><![CDATA[ಪುನರ್ವಸು ಮಳೆಗೆ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ಕೃಷಿ ಚುಟುವಟಿಕೆ ಚುರುಕು]]></title>
            <link>https://kannada.asianetnews.com/karnataka-districts/chikmagaluru-water-level-in-tunga-river-rises-due-to-restorative-rains-agricultural-activities-boosted-mrq/articleshow-1o489qi</link>
            <guid isPermaLink="true">https://kannada.asianetnews.com/karnataka-districts/chikmagaluru-water-level-in-tunga-river-rises-due-to-restorative-rains-agricultural-activities-boosted-mrq/articleshow-1o489qi</guid>
            <pubDate>Mon, 20 Jul 2026 11:46:38 +0530</pubDate>
            <description><![CDATA[ಶೃಂಗೇರಿ ತಾಲೂಕಿನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆಯ ನಡುವೆಯೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಶೃಂಗೇರಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxz2jgycsefk64ktx5ctxw0t,imgname-tunga-river-1784528061388.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು: &amp;nbsp;&lt;/strong&gt;ಶೃಂಗೇರಿ ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆ ಆರ್ಭಟ ಭಾನುವಾರವೂ ಮುಂದುವರಿದಿತ್ತು.&lt;/p&gt;&lt;p&gt;ಗುರುವಾರದಿಂದ ಅಬ್ಬರಿಸುತ್ತಿರುವ ಪುನರ್ವಸು ಮಳೆ ಶುಕ್ರವಾರ, ಶನಿವಾರವೂ ಹಗಲು ರಾತ್ರಿ ಎಡಬಿಡದೆ ನಿರಂತರವಾಗಿ ಮುಂದುವರಿದಿತ್ತು. ತುಂಗಾ ನದಿ ಉಗಮ ಸ್ಥಾನವಾದ ಪಶ್ಚಿಮ ಘಟ್ಟಗಳ ತಪ್ಪಲು ಗಂಗಾಮೂಲ ಎಸ್.ಕೆ ಬಾರ್ಡರ್, ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಮೀನು, ತೋಟಗಳು ಮುಳುಗಡೆಯಾಗಿವೆ. ಮಳೆ ಮುಂದುವರಿದಲ್ಲಿ ಪ್ರವಾಹದ ಭೀತಿ ಉಂಟಾಗಲಿದೆ.&lt;/p&gt;&lt;p&gt;ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ 169 ರ ಮಂಗಳೂರು ಶೃಂಗೇರಿ ಶಿವಮೊಗ್ಗ ಸಂಪರ್ಕ ಕಲ್ಪಿಸುವ ಶೃಂಗೇರಿ ಸಮೀಪದ ಆನೆಗುಂದ ಬಳಿ ಗುಡ್ಡದ ಮಣ್ಣು ಕುಸಿದು ರಸ್ತೆಯತ್ತ ಬರುತ್ತಿದೆ. ತ್ಯಾವಣ ಕೆಎಸ್ಆರ್&zwnj;ಟಿಸಿ ಡಿಪೋ ಬಳಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬೀಳುತ್ತಿದೆ. ತ್ಯಾವಣ ಶಾಲೆ ಸಮೀಪ ರಸ್ತೆ ಪಕ್ಕದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯತ್ತ ಬೀಳುತ್ತದೆ.&amp;nbsp;&lt;/p&gt;&lt;h2&gt;&lt;strong&gt;ಮಳೆಗೆ ರಸ್ತೆ ಸಂಚಾರಕ್ಕೆ ಅಡ್ಡಿ&lt;/strong&gt;&lt;/h2&gt;&lt;p&gt;ಅಪಾಯಕಾರಿ ಸ್ಥಿತಿಯಲ್ಲಿರುವ ಬೃಹತ್ ಮರಗಳು ರಸ್ತೆ, ವಿದ್ಯುತ್ ಲೈನ್ ಮೇಲೆ ಉರುಳಿ ಬೀಳುವ ಆತಂಕವಿದ್ದು, ನೆಮ್ಮಾರು ಸಾಲ್ಮರ ಬಳಿಯೂ ರಾ.ಹೆ.ಪಕ್ಕದ ಗುಡ್ಡ ಕುಸಿದು ಜಾರುತ್ತಿದೆ. ಗಿಡ ಮರಗಳು ಸಹಿತ ಮಣ್ಣು ರಸ್ತೆಯ ಮೇಲೆ ಬೀಳುತ್ತಿದ್ದು ಮಳೆಗೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.&lt;/p&gt;&lt;p&gt;ಗಾಳಿ ಆರ್ಭಟವಿಲ್ಲದೇ ಮಳೆ ಮಾತ್ರ ಅಬ್ಬರಿಸುತ್ತಿದೆ. ನರಸಿಂಹ ಪರ್ವತಗಳ ತಪ್ಪಲು ಸಿಂದೋಡಿ, ಕಿಗ್ಗಾ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನಂದಿನಿ, ನಳಿನಿ ನದಿಗಳು ತುಂಬಿ ಹರಿಯುತ್ತಿದೆ. ಹಳ್ಳ,ಕೆರೆಗಳಲ್ಲಿಯೂ ನೀರು ತುಂಬಿದೆ. ಮಳೆಯಿಂದ ಈವರೆಗೆ ಯಾವುದೇ ಹಾನಿಯಾದ ವರದಿಯಾಗಿಲ್ಲ.&lt;/p&gt;&lt;p&gt;ತಡೆಗೋಡೆ ಕಾಮಗಾರಿ ಚುರುಕು: ಪಟ್ಟಣದ ತಾಲೂಕು ಕಚೇರಿ ಗೋರಿಗುಡ್ಡ ಸಮೀಪದ ನಿರ್ಮಾಣ ಹಂತದ ತಡೆಗೋಡೆ ದುರಸ್ತಿ ಕಾರ್ಯಾಚರಣೆ ಭಾನುವಾರವೂ ನಡೆಯಿತು. ಈಗಾಗಲೇ ತಡೆಗೋಡೆಯೊಳಗೆ ತುಂಬಿಸಿರುವ ಬಹುತೇಕ ಮಣ್ಣನ್ನು ಹಿಟಾಚಿಗಳ ಮೂಲಕ ತೆರವುಗೊಳಿಸಲಾಗಿದೆ. ಕಾಂಕ್ರೀಟ್ ಸ್ಲಾಬ್&zwnj;ಗಳನ್ನು ಬಿರುಕು ಬಿಟ್ಟಿರುವ ಭಾಗದವರೆಗೆ ಕಟ್ ಮಾಡಿ ಗುಡ್ಡ ಕುಸಿಯದಂತೆ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕ ವ್ಯವಸ್ಛೆ ಮಾಡಲಾಗಿದೆ.&lt;/p&gt;&lt;h3&gt;&lt;strong&gt;ಕೃಷಿ ಚುಟುವಟಿಕೆಗಳು ಚುರುಕು&lt;/strong&gt;&lt;/h3&gt;&lt;p&gt;ಮಳೆ ಸುರಿಯುತ್ತಿರುವುದರಿಂದ ಬತ್ತದ ಗೆದ್ದೆಗಳಲ್ಲಿ ನೀರಿನ ಸಂಗ್ರಹವಾಗಿ ಸಸಿ ಅಗಡಿಗಳಲ್ಲಿ ನಾಟಿಗೆ ಸಸಿಗಳನ್ನು ಬೆಳೆಸಲಾಗಿದೆ. ನಾಟಿ ಕಾರ್ಯಕ್ಕೆ ಪೂರ್ವ ಸಿದ್ಧತೆ ಚಟುವಟಿಕೆಗಳು ಆರಂಭಗೊಂಡಿದೆ. ಸಸಿ ಅಗಡಿಗಳು ನೀರಿನಲ್ಲದೇ ಒಣಗಿ ಹೋಗುತ್ತಿದ್ದು, ಕಳೆದೆರೆಡು ದಿನಗಳಿಂದ ಸುರಿದ ಮಳೆಗೆ ಜೀವಕಳೆ ಬಂದಿದೆ. ಈಗಾಗಲೇ ನಾಟಿ ಕಾರ್ಯ ಆರಂಭಗೊಳ್ಳಬೇಕಿತ್ತು. ಆದರೆ ಮಳೆ ಕೊರತೆ, ನೀರಿಲ್ಲದೇ ಕೃಷಿ ಚಟುವಟಿಕೆಗಳಿಗೆ ಹಿನ್ನೆಡೆಯಾಗಿತ್ತು.&lt;/p&gt;&lt;p&gt;ಅಡಕೆ ತೋಟಗಳಲ್ಲಿ ಔಷದಿ ಸಿಂಪಡಣೆ ಕೆಲಸ ಕೂಡ ಚುರುಕುಗೊಂಡಿದೆ. ಕೃಷಿ ಕಾರ್ಮಿಕರ ಕೊರತೆ ನಡುವೆ ಚಟುವಟಿಕೆಗಳು ಚುರುಕುಗೊಂಡಿದೆ.&lt;/p&gt;&lt;p&gt;&lt;strong&gt;ಪ್ರವಾಸಿಗರ ದಂಡು&lt;/strong&gt;&lt;/p&gt;&lt;p&gt;ಒಂದೆಡೆ ಮಳೆ ಸುರಿಯುತ್ತಿದ್ದರೆ ಇನ್ನೊಂದೆಡೆ ಶೃಂಗೇರಿಯತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ವೀಕೆಂಡ್ ಭಾನುವಾರ ಶೃಂಗೇರಿ ಪಟ್ಠಣ ಶ್ರೀಮಠದಲ್ಲಿ ಪ್ರವಾಸಿಗರ ಗುಂಪು ಕಂಡುಬಂದಿತು. ಶ್ರೀ ಮಠದ ಆವರಣ, ಶಾರದಾಂಬಾ ದೇವಾಲಯ, ನರಸಿಂಹ ವನ ,ಶೃಂಗೇರಿ ಪಟ್ಟಣ, ಭಾರತೀ ಬೀದಿ ಎಲ್ಲೆಡೆ ಬೆಳಿಗ್ಗೆಯಿಂದಲೇ ಜನಜಂಗುಳಿ ಕಂಡುಬಂದಿತು. ವಸತಿ ಗೃಹಗಳು ತುಂಬಿವೆ. ವಾಹನ ನಿಲುಗಡೆ ಪ್ರದೇಶವಾಗಿರುವ ಗಾಂಧಿ ಮೈದಾನ, ಭಾರತೀ ಬೀದಿಯಲ್ಲಿ ವಾಹನ ದಟ್ಟಣೆಯಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chikmagaluru-water-level-in-tunga-river-rises-due-to-restorative-rains-agricultural-activities-boosted-mrq/articleshow-1o489qi"/>
        </item>
        <item>
            <title><![CDATA[ಚಿಕ್ಕಮಗಳೂರು: ಕಾಫಿನಾಡಿಲ್ಲಿ ಜೋರಾದ ಮಳೆ ಆರ್ಭಟ, ಶೃಂಗೇರಿ ದೇಗುಲ ರಸ್ತೆ ಜಲಾವೃತ]]></title>
            <link>https://kannada.asianetnews.com/karnataka-districts/chikkamagaluru-heavy-rains-bhadra-tunga-floods-kalsa-sringeri-highway-closed-san/articleshow-1v75n1i</link>
            <guid isPermaLink="true">https://kannada.asianetnews.com/karnataka-districts/chikkamagaluru-heavy-rains-bhadra-tunga-floods-kalsa-sringeri-highway-closed-san/articleshow-1v75n1i</guid>
            <pubDate>Sat, 01 Aug 2026 15:00:47 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಕಳಸ-ಕಾರ್ಕಳ ಹೆದ್ದಾರಿ ಬಂದ್ ಆಗಿದ್ದು, ಶೃಂಗೇರಿಯ ದೇಗುಲದ ರಸ್ತೆ ಜಲಾವೃತಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyyafb4tgvwe258myz7h7z9b,imgname-chikkamagalur-rain-1785576533146.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಆ.1): &lt;/strong&gt;ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕಳಸ, ಶೃಂಗೇರಿ ಹಾಗೂ ಕುದುರೆಮುಖ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರಮುಖ ನದಿಗಳಾದ ತುಂಗಾ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.&lt;/p&gt;&lt;p&gt;ಕಳಸ ತಾಲೂಕಿನ ಕುದುರೆಮುಖ ಹಾಗೂ ಕಳಸ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಜಾಂಬಳೆ ಗ್ರಾಮದ ಬಳಿ ಇರುವ ಪ್ರಮುಖ ಸೇತುವೆಯ ಮೇಲೆ ಭದ್ರಾ ನದಿಯ ಪ್ರವಾಹದ ನೀರು ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದು, ಕಳಸ-ಕಾರ್ಕಳ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸೇತುವೆ ಮೇಲೆ 2 ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದರೂ ಕೆಲ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಅಪಾಯಕಾರಿ ಸಾಹಸಕ್ಕೆ ಇಳಿಯುತ್ತಿರುವ ದೃಶ್ಯ ಕಂಡುಬಂದಿದೆ.&lt;/p&gt;&lt;h2&gt;&lt;strong&gt;ಶೃಂಗೇರಿ ದೇಗುಲದ ರಸ್ತೆ ಜಲಾವೃತ, ಕೆರೆಕಟ್ಟೆಯಲ್ಲಿ ಪ್ರಳಯ ಸಾದೃಶ ಮಳೆ!&lt;/strong&gt;&lt;/h2&gt;&lt;p&gt;ಶೃಂಗೇರಿ ತಾಲೂಕು ಹಾಗೂ ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ತುಂಗಾ ನದಿಯ ಒಳಹರಿವು ಹೆಚ್ಚಾಗಿದೆ. ನದಿಯ ಅಬ್ಬರಕ್ಕೆ ಶೃಂಗೇರಿ ಶ್ರೀ ಶಾರದಾಂಬೆ ದೇಗುಲದ ಪಾರ್ಕಿಂಗ್ ಲಾಟ್&zwnj;ಗೆ ತೆರಳುವ ಪ್ಯಾರಲಲ್ ರಸ್ತೆಯಲ್ಲಿ ಸುಮಾರು 3 ರಿಂದ 4 ಅಡಿ ನೀರು ನಿಂತಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.&lt;/p&gt;&lt;h2&gt;&lt;strong&gt;ಮಾಕೋಡಿನಲ್ಲಿ ಕಾಲುಸಂಕ ಮುಳುಗಡೆ, ಜೋಗಿಕುಂಬ್ರಿಯಲ್ಲಿ ಭೂಕುಸಿತ!&lt;/strong&gt;&lt;/h2&gt;&lt;p&gt;ಕುದುರೆಮುಖ ಗುಡ್ಡಗಾಡು ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಟ, ಗದ್ದೆ ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಕಳಸ ತಾಲೂಕಿನ ಸಂಸೆ ಸಮೀಪದ ಮಾಕೋಡು ಗ್ರಾಮದಲ್ಲಿ ಹರಿಯುವ ನದಿಯ ಅಬ್ಬರಕ್ಕೆ ಕಬ್ಬಿಣದ ಕಾಲುಸಂಕವೇ ಮುಳುಗಡೆಯಾಗಿದೆ. ಜೋಗಿಕುಂಬ್ರಿಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಸುರೇಶ್ ಹಾಗೂ ವೆಂಕಟೇಶ್ ಎಂಬುವರ ಅಡಿಕೆತೋಟಗಳಿಗೆ ಮಣ್ಣು ಜಾರಿಬಿದ್ದಿದೆ. ತೋಟಗಳಲ್ಲಿ ಬರೋಬ್ಬರಿ 2 ಅಡಿ ಎತ್ತರಕ್ಕೆ ನೀರು ನಿಂತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;&lt;h2&gt;&lt;strong&gt;ಜಿಲ್ಲಾಡಳಿತದಿಂದ ಎಚ್ಚರಿಕೆ&lt;/strong&gt;&lt;/h2&gt;&lt;p&gt;ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ನದಿ ತೀರದ ನಿವಾಸಿಗಳು, ತಗ್ಗು ಪ್ರದೇಶದಲ್ಲಿ ಇರುವವರು ಹಾಗೂ ವಾಹನ ಸವಾರರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ಅನಗತ್ಯವಾಗಿ ನೀರಿನ ಹರಿವಿನ ಬಳಿ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದೆ.&lt;/p&gt;]]></content:encoded>
            <category>chikkamagalur</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/chikkamagaluru-heavy-rains-bhadra-tunga-floods-kalsa-sringeri-highway-closed-san/articleshow-1v75n1i"/>
        </item>
        <item>
            <title><![CDATA[ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶದಲ್ಲಿ ವೇಶ್ಯಾವಾಟಿಕೆಗೆ ಮಾರಿದ ಪೋಷಕರು, ಆಫ್ರೀಕಾದಲ್ಲಿ ಯುವತಿ ಆರ್ತನಾದ!]]></title>
            <link>https://kannada.asianetnews.com/gallery/karnataka-districts/chikkamagaluru-hakki-pikki-human-trafficking-parents-sell-daughter-for-rs-7-lakh-in-africa-gdp-g4048gf</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-hakki-pikki-human-trafficking-parents-sell-daughter-for-rs-7-lakh-in-africa-gdp-g4048gf</guid>
            <pubDate>Thu, 16 Jul 2026 12:25:29 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ &amp;nbsp;ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್&zwnj;ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದಾರೆ. ಯುವತಿಯು ವಿಡಿಯೋ ಮೂಲಕ ಸಹಾಯ ಯಾಚಿಸಿದ ನಂತರ, ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಇದೀಗ ಪಾಪಿ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxmtmed8heg21gdqcx5ytvyd,imgname-chikkamagaluru-parents-sell-daughter-in-senegal-africa--3--1784184191400.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ &amp;nbsp;ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್&zwnj;ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದಾರೆ. ಯುವತಿಯು ವಿಡಿಯೋ ಮೂಲಕ ಸಹಾಯ ಯಾಚಿಸಿದ ನಂತರ, ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಇದೀಗ ಪಾಪಿ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು: ಹಣದ ಆಸೆಗಾಗಿ ಹೆತ್ತ ಮಗಳನ್ನೇ ಪೋಷಕರು ವಿದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿರುವ ಅಮಾನುಷ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಗಿಡಮೂಲಿಕೆ ವ್ಯಾಪಾರದ ನೆಪದಲ್ಲಿ ವಿದೇಶಕ್ಕೆ ಕರೆದೊಯ್ದು, ಸ್ವಂತ ಮಗಳನ್ನೇ ಜೀವಾಳ ಬಲಿಗೊಟ್ಟ ಪಾಪಿ ಪೋಷಕರ ಕೃತ್ಯ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ಕೂಪಕ್ಕೆ ತಳ್ಳಲ್ಪಟ್ಟಿದ್ದ 20 ವರ್ಷದ ಯುವತಿ ನಂದಿತಾಳನ್ನು ಭಾರತೀಯ ರಾಯಭಾರ ಕಚೇರಿ (Indian Embassy) ಹಾಗೂ ಸ್ಥಳೀಯರ ಸಹಾಯದಿಂದ ಇದೀಗ ಯಶಸ್ವಿಯಾಗಿ ರಕ್ಷಿಸಲಾಗಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಸಮೀಪವಿರುವ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಕ್ರಾಂತಿ ಮತ್ತು ರಾಜಶೇಖರ್ ಎಂಬ ದಂಪತಿಗೆ ನಂದಿತಾ (20) ಎಂಬ ಮಗಳಿದ್ದಾಳೆ. ಮೂಲ ಬುಡಕಟ್ಟು ಸಮುದಾಯಕ್ಕೆ ಸೇರಿದ ಈ ಕುಟುಂಬವು ಗಿಡಮೂಲಿಕೆ ಮತ್ತು ಸಾಂಪ್ರದಾಯಿಕ ಔಷಧ ವ್ಯಾಪಾರಕ್ಕಾಗಿ ಸುಮಾರು 4 ತಿಂಗಳ ಹಿಂದಷ್ಟೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶಕ್ಕೆ ತೆರಳಿತ್ತು.&lt;/p&gt;&lt;img&gt;&lt;p&gt;ತಮ್ಮೊಂದಿಗೆ ಮಗಳು ನಂದಿತಾಳನ್ನು ಕರೆದೊಯ್ದಿದ್ದ ಪೋಷಕರು, ಕೇವಲ 10 ದಿನಗಳ ಹಿಂದೆ ತೀವ್ರ ಹಣದ ಆಸೆಗೆ ಬಿದ್ದು, ಅಲ್ಲಿನ ವೇಶ್ಯಾವಾಟಿಕೆ ದಂಧೆಕೋರರಿಗೆ ಬರೋಬ್ಬರಿ ₹7 ಲಕ್ಷ ರೂಪಾಯಿಗೆ ಮಗಳನ್ನೇ ಮಾರಾಟ ಮಾಡಿದ್ದರು. ಮಗಳನ್ನು ಮಾರಾಟ ಮಾಡಿದ ಬಳಿಕ ಭಾರತಕ್ಕೆ ಮರಳಿದ್ದ ಈ ಕಟುಕ ಪೋಷಕರು, &quot;ಮಗಳು ಭಾರತಕ್ಕೆ ಮರಳಿದ್ದಾಳೆ, ನಮಗಿಂತ ಮೊದಲೇ ಊರಿಗೆ ಹೋಗಿದ್ದಾಳೆ&quot; ಎಂದು ಸ್ಥಳೀಯರ ಬಳಿ ಸುಳ್ಳು ಕಥೆ ಕಟ್ಟಿ ನಂಬಿಸಲು ಯತ್ನಿಸಿದ್ದರು.&lt;/p&gt;&lt;img&gt;&lt;p&gt;ಮಗಳನ್ನು ದಂಧೆಗೆ ತಳ್ಳಿದ ಬಳಿಕ ಭಾರತಕ್ಕೆ ಮರಳಿದ್ದ ಈ ಪೋಷಕರು, ತಮ್ಮ ಪಾಪದ ಕೃತ್ಯವನ್ನು ಮುಚ್ಚಿಹಾಕಲು ಹರಸಾಹಸ ಪಟ್ಟಿದ್ದರು. ಯಾರಾದರೂ ಮಗಳ ಬಗ್ಗೆ ವಿಚಾರಿಸಿದರೆ, &quot;ಮಗಳು ಭಾರತಕ್ಕೆ ವಾಪಸ್ ಹೋಗಿದ್ದಾಳೆ&quot; ಎಂದು ಸುಳ್ಳಿನ ಕಥೆ ಕಟ್ಟಿ ಎಲ್ಲರನ್ನೂ ನಂಬಿಸಲು ಯತ್ನಿಸಿದ್ದರು. ವಿದೇಶದಲ್ಲಿ ನರಕಯಾತನೆ ಅನುಭವಿಸುತ್ತಿದ್ದ ನಂದಿತಾ, ಧೈರ್ಯಗೆಡದೆ ಕಷ್ಟಪಟ್ಟು ಸೆನೆಗಲ್&zwnj;ನಿಂದಲೇ ತನಗೆ ಪರಿಚಯವಿದ್ದವರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿದ್ದಾಳೆ. ತಂದೆ-ತಾಯಿಯೇ ಹಣಕ್ಕಾಗಿ ತನ್ನನ್ನು ವೇಶ್ಯಾವಾಟಿಕೆಗೆ ಮಾರಾಟ ಮಾಡಿರುವ ಕಹಿ ಸತ್ಯವನ್ನು ಬಿಚ್ಚಿಟ್ಟಿದ್ದಾಳೆ. ಅಷ್ಟೇ ಅಲ್ಲದೆ, ತನಗೆ ಆಗಿರುವ ಅನ್ಯಾಯ ಮತ್ತು ಅಲ್ಲಿ ತಾನು ಅನುಭವಿಸುತ್ತಿರುವ ಚಿತ್ರಹಿಂಸೆಯ ಬಗ್ಗೆ ವಿಡಿಯೋ ಮಾಡಿ ತಾಯ್ನಾಡಿಗೆ ಕಳುಹಿಸಿಕೊಟ್ಟಿದ್ದಾಳೆ. ಈ ವಿಡಿಯೋ ಊರಿನ ಪರಿಚಯಸ್ಥರ ಕೈ ತಲುಪುತ್ತಿದ್ದಂತೆ ಇಡೀ ಹಕ್ಕಿಪಿಕ್ಕಿ ಕಾಲೋನಿಯ ಜನ ದಿಗ್ಭ್ರಮೆಗೊಂಡಿದ್ದಾರೆ.&lt;/p&gt;&lt;img&gt;&lt;p&gt;ಯುವತಿಯ ವಿಡಿಯೋ ಮತ್ತು ಸಂದೇಶ ತಲುಪುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ಹಾಗೂ ಸಂಘಟನೆಯವರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಭಾರತೀಯ ರಾಯಭಾರ ಕಚೇರಿಗೆ (Indian Embassy) ವಿಷಯ ಮುಟ್ಟಿಸಿ, ಸೆನಗಲ್&zwnj;ನ ಸ್ಥಳೀಯ ಪೊಲೀಸರ ಸಹಾಯದೊಂದಿಗೆ ನಂದಿತಾಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ತಮ್ಮ ಮಗಳನ್ನು ರಕ್ಷಿಸಿರುವ ವಿಷಯ ತಿಳಿಯುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಕ್ರಾಂತಿ ಮತ್ತು ರಾಜಶೇಖರ್ ದಂಪತಿ ಸದ್ದಿಲ್ಲದೆ ಊರಿಗೆ ಮರಳಿದ್ದಾರೆ. ಸದ್ಯ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ನಂದಿತಾಗೆ ಸೂಕ್ತ ನ್ಯಾಯ ಕೊಡಿಸಬೇಕು ಮತ್ತು ಆಕೆಯನ್ನು ಈ ನರಕಕ್ಕೆ ತಳ್ಳಿದ ಹೆತ್ತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಮುಖಂಡರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (SP) ಅಧಿಕೃತವಾಗಿ ದೂರು ಪತ್ರ ಸಲ್ಲಿಸಿದ್ದಾರೆ. ಸದ್ಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಈ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/chikkamagaluru-hakki-pikki-human-trafficking-parents-sell-daughter-for-rs-7-lakh-in-africa-gdp-g4048gf"/>
        </item>
        <item>
            <title><![CDATA['ಇದೇ ರೀತಿ ಮಾತು ಮುಂದುವರಿಸಿದ್ರೆ..'   ಮುಲ್ಲಾನ ಬಗ್ಗೆ ಸಿಟಿ ರವಿ ಹೇಳಿಕೆಗೆ ಎಸ್‌ಡಿಪಿಐ ವಾರ್ನಿಂಗ್]]></title>
            <link>https://kannada.asianetnews.com/politics/sdpi-warns-ct-ravi-over-his-statement-on-muslims-at-chikkamagaluru/articleshow-h797uu6</link>
            <guid isPermaLink="true">https://kannada.asianetnews.com/politics/sdpi-warns-ct-ravi-over-his-statement-on-muslims-at-chikkamagaluru/articleshow-h797uu6</guid>
            <pubDate>Tue, 28 Jul 2026 11:24:14 +0530</pubDate>
            <description><![CDATA[&lt;p&gt;'ಮುಲ್ಲಾನ ಎದೆ ಸೀಳಿದರೆ ಮೂರಕ್ಷರವಿಲ್ಲ..' ಎಂಬ ಎಂಎಲ್&zwnj;ಸಿ ಸಿಟಿ ರವಿ ಹೇಳಿಕೆ ವಿಚಾರವಾಗಿ ಎಸ್&zwnj;ಡಿಪಿಐ ಆಕ್ರೋಶ ವ್ಯಕ್ತಪಡಿಸಿದ್ದು, ಸಿಟಿ ರವಿ ಇದೇ ರೀತಿ ಮಾತು ಮುಂದುವರಿಸಿದರೆ ಚಿಕ್ಕಮಗಳೂರಿಗೆ ಕಾಲಿಡಲು ಬಿಡೋಲ್ಲ ಎಂದು ಎಚ್ಚರಿಕೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kykm3g0b2xakc0zc80gtm2m4,imgname-----------------------2026-07-28t111508.303-1785217531915.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರು (ಜು.28): 'ಮುಲ್ಲಾನ ಎದೆ ಸೀಳಿದರೆ ಮೂರಕ್ಷರವಿಲ್ಲ..' ಎಂಬ ಎಂಎಲ್&zwnj;ಸಿ ಸಿಟಿ ರವಿ ಹೇಳಿಕೆ ವಿಚಾರವಾಗಿ ಇದೀಗ ಚಿಕ್ಕಮಗಳೂರಿನಲ್ಲಿ ಹಿಂದೂ-ಮುಸ್ಲಿಂ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಸಿಟಿ ರವಿ ಹೇಳಿಕೆಗೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, 'ಇದೇ ರೀತಿ ಮಾತನಾಡುತ್ತಿದ್ದಾರೆ, ಮುಸ್ಲಿಂರೆಲ್ಲ ಒಗ್ಗಟ್ಟಾಗಿ ಚಿಕ್ಕಮಗಳೂರಿಗೆ ಕಾಲಿಡದಂತೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದೆ.&lt;/p&gt;&lt;h2&gt;ಸಿಟಿ ರವಿಗೆ ಎಸ್&zwnj;ಡಿಪಿಐ ಎಚ್ಚರಿಕೆ&lt;/h2&gt;&lt;p&gt;ಸಿಟಿ ರವಿ ಹೇಳಿಕೆ ವಿಚಾರವಾಗಿ ಇಂದು ಎಸ್&zwnj;ಡಿಪಿಐ ಮುಖಂಡ ಅತೀಕ್ ಚಿಕ್ಕಮಗಳೂರಿನ ಪ್ರೆಸ್&zwnj; ಕ್ಲಬ್&zwnj;ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮುಲ್ಲಾಗಳು ಯಾರೂ ಅನಕ್ಷರಸ್ಥರಲ್ಲ. ಸಿಟಿ ರವಿ ಮಾತೆತ್ತಿದ್ದರೆ ಮುಸ್ಲಿಂರನ್ನ ಎಳೆದು ತರ್ತಾರೆ, ಮುಸ್ಲಿಮರನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ. ಇನ್ಮುಂದೆ ನಾವು ದ್ವೇಷ ಭಾಷಣ ಸಹಿಸೋಲ್ಲ. ಭಾಷಣದಲ್ಲಿ ಇದೇ ರೀತಿ ಬಾಯ್ಬಿಡ್ತಿದ್ರೆ ನಾವು ನಿಮ್ಮನ್ನು ಚಿಕ್ಕಮಗಳೂರಿಗೆ ನುಗ್ಗೋಕೆ ಬಿಡೋಲ್ಲ, ಮುಂದೆ ಇಂತಹ ಸನ್ನಿವೇಶ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಿದರು.&lt;/p&gt;&lt;h3&gt;ಸಿಟಿ ರವಿ ಎದೆ ಸೀಳಿದರೆ ಎಷ್ಟು ಅಕ್ಷರ ಇವೆ?&lt;/h3&gt;&lt;p&gt;ಸಿಟಿ ರವಿ ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ ಅಂತಾರೆ. ಹಾಗಾದ್ರೆ ಸಿಟಿ ರವಿ ಎದೆ ಸೀಳಿದ್ರೆ ಎಷ್ಟು ಇದೆ ಎಂದು ಹೇಳಬೇಕು ಎಂದು ಮುಸ್ಲಿಮ್ ಮುಖಂಡ ಅತೀಕ್ ಪ್ರಶ್ನಿಸಿದರೆ. ಅತೀಕ್ ಮಾತಿಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಬೆಳವಣಿಗೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/sdpi-warns-ct-ravi-over-his-statement-on-muslims-at-chikkamagaluru/articleshow-h797uu6"/>
        </item>
        <item>
            <title><![CDATA[ಕಡೂರಿನಲ್ಲಿ ಹಂದಿ ಬೇಟೆಗಾಗಿ ಹಾಕಿದ್ದ ಲೈನ್ ತುಳಿದು ವ್ಯಕ್ತಿ ಸಾವು.. ಸಾಕ್ಷ್ಯ ನಾಶಕ್ಕೆ ನಡೀತು ಮೈ ನಡುಗಿಸುವ ಕೃತ್ಯ]]></title>
            <link>https://kannada.asianetnews.com/chikkamagalur/man-dies-after-stepping-on-electric-wire-laid-for-wild-boar-hunt-in-chikkamagalurus-kaduru-taluq-gkn/articleshow-kwlv1u7</link>
            <guid isPermaLink="true">https://kannada.asianetnews.com/chikkamagalur/man-dies-after-stepping-on-electric-wire-laid-for-wild-boar-hunt-in-chikkamagalurus-kaduru-taluq-gkn/articleshow-kwlv1u7</guid>
            <pubDate>Mon, 27 Jul 2026 09:37:44 +0530</pubDate>
            <description><![CDATA[&lt;p&gt;ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ, ಕೊಲೆ ಪ್ರಕರಣದ ಮಾದರಿಯಲ್ಲೇ ತಿರುವು ಪಡೆದುಕೊಂಡಿದೆ. ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು ಶವವನ್ನೇ ಹೂತು ಹಾಕಿ, ಕೇಸ್ ಮುಚ್ಚಿ ಹಾಕಲು ನಡೆಸಿದ್ದ ಮಾಸ್ಟರ್ ಪ್ಲಾನ್ ಸಿಸಿ ಕ್ಯಾಮೆರಾದ ಒಂದು ದೃಶ್ಯದಿಂದ ವಿಫಲವಾಗಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kygw0ygg839mhzrmryh1bvfk,imgname-kaduru-boar-hunting-1785125173776.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು: &lt;/strong&gt;ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು ಶವವನ್ನು ಗುಟ್ಟಾಗಿ ಹೂತುಹಾಕಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ&lt;/strong&gt;&lt;/h2&gt;&lt;p&gt;ಕಡೂರು ತಾಲೂಕಿನ ಯಗಟಿ ಸಮೀಪದ ದೊಣ್ಣೆಕೋರನಹಳ್ಳಿ ಗ್ರಾಮದ ಕರಿಯಪ್ಪ (52) ಮೃತಪಟ್ಟ ದುರ್ದೈವಿ. ಜಮೀನಿನಲ್ಲಿ ಕಾಡುಹಂದಿಗಳ ಹಾವಳಿ ತಡೆಯಲು ಬೇಟೆಗಾರರು ವಿದ್ಯುತ್ ತಂತಿ ಅಳವಡಿಸಿದ್ದರು. ಈ ವಿದ್ಯುತ್ ಲೈನ್&zwnj;ಗೆ ಅಚಾನಕ್ಕಾಗಿ ಕರಿಯಪ್ಪ ಸಿಲುಕಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಬೇಟೆಗಾರರು ಯಾರಿಗೂ ತಿಳಿಯದಂತೆ ಶವವನ್ನು ಜಮೀನಿನಲ್ಲೇ ಹೂತುಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ರಹಸ್ಯ ಬಯಲಾಗಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಮನೆಗೆ ಹೋದ ಕರಿಯಪ್ಪ ಅವರು ಎಷ್ಟು ಹೊತ್ತಾದರೂ ಮರಳಿ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಮೀಪದ ಜಮೀನಿನ ಬಳಿ ಇದ್ದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಕರಿಯಪ್ಪ ಓಡಾಡುತ್ತಿರುವ ದೃಶ್ಯ ಪತ್ತೆಯಾಗಿದೆ. ಅದರ ಬೆನ್ನಲ್ಲೇ ಕೆಲವೇ ಗಂಟೆಗಳ ನಂತರ ಅದೇ ಮಾರ್ಗದಲ್ಲಿ ಮತ್ತೋರ್ವ ವ್ಯಕ್ತಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಆ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಇಡೀ ಪ್ರಕರಣದ ಸತ್ಯಾಂಶ ಹೊರಬಿದ್ದಿದೆ.&lt;/p&gt;&lt;h2&gt;&lt;strong&gt;ಮೂವರು ಆರೋಪಿಗಳ ಬಂಧನ&lt;/strong&gt;&lt;/h2&gt;&lt;p&gt;ಈ ಕೃತ್ಯಕ್ಕೆ ಸಂಬಂಧಿಸಿದಂತೆ ಯಗಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬೇಟೆಗಾರರು ತಂತಿ ಹಾಕಿದ್ದ ಜಾಗದಲ್ಲೇ ಕರಿಯಪ್ಪ ಮೃತಪಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ಶವ ಹೂತು ಹಾಕಿರುವ ಸ್ಥಳಕ್ಕೆ ತರೀಕೆರೆ ಎಸಿ (ಸಹಾಯಕ ಆಯುಕ್ತರು) ಅವರು ಇಂದು ಭೇಟಿ ನೀಡಲಿದ್ದು, ಅವರ ಸಮ್ಮುಖದಲ್ಲಿ ಹೂತಿರುವ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಅಹಿತಕರ ಘಟನೆ ನಡೆಯದಂತೆ ಮತ್ತು ಸಾಕ್ಷ್ಯಗಳಿಗೆ ಧಕ್ಕೆಯಾಗದಂತೆ ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ನಿಯೋಜಿಸಿದ್ದಾರೆ. ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>chikkamagalur</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/chikkamagalur/man-dies-after-stepping-on-electric-wire-laid-for-wild-boar-hunt-in-chikkamagalurus-kaduru-taluq-gkn/articleshow-kwlv1u7"/>
        </item>
        <item>
            <title><![CDATA[ಜ್ಯೋತಿಷಿಗಳು ನುಡಿದಿದ್ದ ಮಾತು ನಿಜವಾಯ್ತು, ಚೆನ್ನಮ್ಮ ಅವರಿಗೆ ಸಿಕ್ಕಿತು ಮುತ್ತೈದೆ ಸಾವು: ವೈಎಸ್‌ವಿ ದತ್ತ]]></title>
            <link>https://kannada.asianetnews.com/chikkamagalur/ysv-datta-emotional-on-chennamma-deve-gowda-mutthaide-savu-astrology-san/articleshow-lnezxa2</link>
            <guid isPermaLink="true">https://kannada.asianetnews.com/chikkamagalur/ysv-datta-emotional-on-chennamma-deve-gowda-mutthaide-savu-astrology-san/articleshow-lnezxa2</guid>
            <pubDate>Sat, 18 Jul 2026 22:04:11 +0530</pubDate>
            <description><![CDATA[&lt;p&gt;ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ವೈಎಸ್&zwnj;ವಿ ದತ್ತ, ಅವರ ಸಾವಿನ ಕುರಿತು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯ ನಿಜವಾದ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxv152vqfaj3ppqnvk46p3b1,imgname-ysv-datta-on-chennamma-1784392354679.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಜು.18): &lt;/strong&gt;ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಅವರ ಕುಟುಂಬದ ಆಪ್ತ, ಮಾಜಿ ಶಾಸಕ ವೈಎಸ್&zwnj;ವಿ ದತ್ತ ತೀವ್ರ ಕಂಬನಿ ಮಿಡಿದಿದ್ದಾರೆ. ಕಡೂರಿನಲ್ಲಿ ಮಾಧ್ಯಮಗಳೊಂದಿಗೆ ಭಾವುಕರಾಗಿ ಮಾತನಾಡಿದ ಅವರು, ಚೆನ್ನಮ್ಮ ಅವರ ಮುಗ್ಧತೆ, ದಾಂಪತ್ಯ ಮತ್ತು ಅವರ ಧಾರ್ಮಿಕ ಬದುಕಿನ ಹಲವು ರೋಚಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಚೆನ್ನಮ್ಮ ಅವರ ಸಾವಿನ ಕುರಿತು ಜ್ಯೋತಿಷಿಗಳು ಈ ಹಿಂದೆ ನುಡಿದಿದ್ದ ಭವಿಷ್ಯವೊಂದು ಈಗ ನಿಜವಾಗಿರುವ ಮಾಹಿತಿ ನೀಡಿದ್ದಾರೆ.&lt;/p&gt;&lt;p&gt;ಚೆನ್ನಮ್ಮ ಅವರ ನಿಧನದ ಕುರಿತು ಮಾತನಾಡುತ್ತಾ ವೈ.ಎಸ್.ವಿ. ದತ್ತ ಅವರು, ಚೆನ್ನಮ್ಮನವರಿಗೆ ಮುತ್ತೈದೆ ಸಾವು ಬರಲಿದೆ ಎಂದು ಹಿಂದೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದರು.ಇಂದು ಅದೇ ರೀತಿ ದೇವೇಗೌಡರ ಸಮ್ಮುಖದಲ್ಲೇ ಅವರು ಮುತ್ತೈದೆಯಾಗಿಯೇ ಕಣ್ಣು ಮುಚ್ಚಿದ್ದಾರೆ. ಜ್ಯೋತಿಷಿಗಳು ಅಂದು ಹೇಳಿದ್ದ ಮಾತು ಇಂದು ಅಕ್ಷರಶಃ ನಿಜವಾಗಿದೆ ಎಂದಿದ್ದಾರೆ. ಅಲ್ಲದೆ ಶನಿವಾರ ಮಧ್ಯಾಹ್ನ ತಾವೇ ಖುದ್ದಾಗಿ ದೇವೇಗೌಡರನ್ನು ಭೇಟಿಯಾದಾಗ, ಸಂಜೆ ಹೊತ್ತಿಗೆ ಚೆನ್ನಮ್ಮನವರ ಆರೋಗ್ಯ ಸರಿಯಾಗಬಹುದು ಎಂದು ಗೌಡರು ಆಶಾಭಾವನೆ ವ್ಯಕ್ತಪಡಿಸಿದ್ದರು ಎಂದಿದ್ದಾರೆ.&lt;/p&gt;&lt;h2&gt;&lt;strong&gt;'ನನ್ನ ತಾಯಿಯನ್ನೇ ಕಳೆದುಕೊಂಡಷ್ಟು ದುಃಖವಾಗಿದೆ'&lt;/strong&gt;&lt;/h2&gt;&lt;p&gt;ಚೆನ್ನಮ್ಮ ಅವರೊಂದಿಗಿನ ತಮ್ಮ ಒಡನಾಟವನ್ನು ನೆನೆದ ದತ್ತ, ಅವರ ನಿಧನದಿಂದ ನನಗೆ ನನ್ನ ಸ್ವಂತ ತಾಯಿಯನ್ನೇ ಕಳೆದುಕೊಂಡಷ್ಟು ದುಃಖವಾಗಿದೆ. ನಾನು ಒಂದೆರಡು ತಿಂಗಳು ಬೆಂಗಳೂರಿನ ಅವರ ಮನೆಗೆ ಹೋಗದಿದ್ದರೆ ಸಾಕು, ತಾವೇ ಖುದ್ದಾಗಿ ಫೋನ್ ಮಾಡಿ ಮನೆಗೆ ಬರಲು ಹೇಳುತ್ತಿದ್ದರು. ಮನೆಗೆ ಹೋದ ತಕ್ಷಣ 'ಯಾಕೋ ಇಷ್ಟು ದಿನ ಬರಲಿಲ್ಲ?' ಎಂದು ಪ್ರೀತಿಯಿಂದಲೇ ಗದರುತ್ತಿದ್ದರು. ಕೆಲವೊಮ್ಮೆ 'ಗೌಡರಿಗೆ ಜ್ವರ ಬಂದಿದೆ, ಸ್ವಲ್ಪ ಮಂಕಾಗಿದ್ದಾರೆ. ನೀನು ಬಂದರೆ ಅವರು ಹುಷಾರಾಗುತ್ತಾರೆ, ತಕ್ಷಣ ಬಾ' ಎಂದು ನನ್ನನ್ನು ಕರೆಯುತ್ತಿದ್ದರು&quot; ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಯಾರೂ ಹೆದರಿಸಲಾಗದ ದೇವೇಗೌಡರನ್ನು ಉಪವಾಸ ಮಾಡಿಸುತ್ತಿದ್ದ ಶಕ್ತಿ!&lt;/strong&gt;&lt;/h2&gt;&lt;p&gt;ರಾಜಕೀಯದಲ್ಲಿ ಎಚ್.ಡಿ. ದೇವೇಗೌಡರನ್ನು ಹೆದರಿಸಲು ಯಾರಿಂದಲೂ ಸಾಧ್ಯವಿರಲಿಲ್ಲ. ಆದರೆ, ಮನೆಯಲ್ಲಿ ಮಾತ್ರ ಹಬ್ಬ ಹರಿದಿನ ಬಂದರೆ ಸಾಕು, ಗೌಡರು ಚೆನ್ನಮ್ಮನವರ ಜೊತೆ ಮೌನವಾಗಿ ಉಪವಾಸ ಕೂರಬೇಕಿತ್ತು. ಅಷ್ಟರಮಟ್ಟಿಗೆ ಗೌಡರ ಮೇಲೆ ಅವರಿಗೆ ಅಧಿಕಾರವಿತ್ತು. ಚೆನ್ನಮ್ಮನವರ ಇಡೀ ಜಗತ್ತೇ ದೇವೇಗೌಡರಾಗಿದ್ದರು. ಸದಾ ಪೂಜೆ, ಪುನಸ್ಕಾರ, ಉಪವಾಸ ಎಂದು ಕಳೆಯುತ್ತಿದ್ದ ಅಪ್ಪಟ ದೈವಭಕ್ತೆ ಅವರಾಗಿದ್ದರು. ದೇವಸ್ಥಾನಗಳಲ್ಲಿ ಅರ್ಚನೆ ಮಾಡಿಸುವಾಗ ಇಡೀ ದೊಡ್ಡಮನೆ ಕುಟುಂಬದ ಎಲ್ಲ ಸದಸ್ಯರ ರಾಶಿ, ನಕ್ಷತ್ರ, ಕುಲ ಮತ್ತು ಗೋತ್ರಗಳನ್ನು ಪಟಪಟನೆ ಹೇಳುತ್ತಿದ್ದರು. ಅದನ್ನು ಕೇಳಿ ದೇವಸ್ಥಾನದ ಅರ್ಚಕರೆ ಅಚ್ಚರಿಪಡುತ್ತಿದ್ದರು ಎಂದು ದತ್ತ ನೆನಪಿಸಿಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಸರ್ಕಾರಿ ಬಂಗಲೆಗೆ ಹಾಸನದಿಂದ ಹಸುಗಳನ್ನು ತಂದಿದ್ದ ಮುಗ್ಧ ಹಳ್ಳಿ ಹೆಣ್ಣುಮಗಳು&lt;/strong&gt;&lt;/h2&gt;&lt;p&gt;ಮಾಜಿ ಪ್ರಧಾನಿ ಪತ್ನಿಯಾಗಿದ್ದರೂ ಅವರಲ್ಲಿ ಲವಲೇಶವೂ ಹಮ್ಮು-ಬಿಮ್ಮು ಇರಲಿಲ್ಲ ಎಂದ ದತ್ತ, ಅವರ ಸರಳತೆಗೆ ಸಾಕ್ಷಿಯಾದ ಘಟನೆಯೊಂದನ್ನು ನೆನಪಿಸಿಕೊಂಡರು. 1983ರಲ್ಲಿ ದೇವೇಗೌಡರು ಮಂತ್ರಿಯಾದಾಗ ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಕ್ಕಿತ್ತು. ಹಾಸನದಿಂದ ಬರುವಾಗ ಚೆನ್ನಮ್ಮನವರು ತಮ್ಮ ನೆಚ್ಚಿನ ಹಸುಗಳನ್ನೂ ಬೆಂಗಳೂರಿಗೆ ತಂದಿದ್ದರು. ಅಷ್ಟೇ ಅಲ್ಲ, ಆ ಐಷಾರಾಮಿ ಸರ್ಕಾರಿ ಬಂಗಲೆಯ ಹಿಂಭಾಗದಲ್ಲೇ ಕೊಟ್ಟಿಗೆ ಕಟ್ಟಿಸಿ ಹಸುಗಳನ್ನು ಸಾಕಿದ್ದರು. ಬಟ್ಟೆ, ಸೀರೆ, ಒಡವೆಗಳ ಮೇಲೆ ಅವರಿಗೆ ಯಾವುದೇ ವ್ಯಾಮೋಹವಿರಲಿಲ್ಲ. ಅವರು ಕೊನೆವರೆಗೂ ಅಪ್ಪಟ ಹಳ್ಳಿ ಹೆಣ್ಣುಮಗಳಾಗಿಯೇ ಬದುಕಿದರು ಎಂದಿದ್ದಾರೆ.&lt;/p&gt;&lt;h2&gt;&lt;strong&gt;ನಜೀರ್ ಸಾಬ್ ಭಟ್ಟರಿಂದ ಪಾಯಸ ಮಾಡೋದನ್ನ ಕಲಿತಿದ್ದರು&lt;/strong&gt;&lt;/h2&gt;&lt;p&gt;ಒಮ್ಮೆ ದೇವೇಗೌಡರು ತಮಗೆ ನಜೀರ್ ಸಾಬ್ ಅವರ ಮನೆಯ ಪಾಯಸ ತುಂಬಾ ಇಷ್ಟ ಎಂದು ಹೇಳಿದ್ದರಂತೆ. ಇದನ್ನು ನೆನಪಿನಲ್ಲಿಟ್ಟುಕೊಂಡ ಚೆನ್ನಮ್ಮನವರು, ನಜೀರ್ ಸಾಬ್ ಅವರ ಮನೆಯ ಅಡುಗೆ ಭಟ್ಟನನ್ನು ತಮ್ಮ ಮನೆಗೆ ಕರೆಸಿಕೊಂಡು, ಅವರಿಂದ ಪಾಯಸ ಮಾಡುವುದನ್ನು ಕಲಿತು ಸ್ವತಃ ತಾವೇ ತಯಾರಿಸಿ ದೇವೇಗೌಡರಿಗೆ ಬಡಿಸಿದ್ದರು! ಇನ್ನು ತಮ್ಮ ಮೇಲಿದ್ದ ಪ್ರೀತಿಯನ್ನು ನೆನೆದ ದತ್ತ, ನನ್ನ ಮಗಳ ಮದುವೆಗೆ ಬರಲು ಅವರಿಗೆ ಸಾಧ್ಯವಾಗಿರಲಿಲ್ಲ. ಆ ಬೇಸರದಲ್ಲೇ ಒಂದು ದಿನ ಬೆಂಗಳೂರಿನಲ್ಲಿ ಯಾರಿಗೂ ಹೇಳದೆ, ಕೇವಲ ಡ್ರೈವರ್&zwnj; ಕರ್ಕೊಂಡು ಸೀದಾ ಕಡೂರಿನಲ್ಲಿದ್ದ ನಮ್ಮ ಮನೆಗೆ ಬಂದು ಸರ್ಪ್ರೈಸ್ ನೀಡಿದ್ದರು&quot; ಎಂದು ಚೆನ್ನಮ್ಮ ಅವರ ಅಪರೂಪದ ಗುಣಗಳನ್ನು ವೈ.ಎಸ್.ವಿ. ದತ್ತ ಕೊಂಡಾಡಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>chikkamagalur</category>
            <dc:creator>Santosh Naik</dc:creator>
            <atom:link href="https://kannada.asianetnews.com/chikkamagalur/ysv-datta-emotional-on-chennamma-deve-gowda-mutthaide-savu-astrology-san/articleshow-lnezxa2"/>
        </item>
        <item>
            <title><![CDATA[ಸರ್ಕಾರದ ವಿರುದ್ಧ ಸಿಡಿದ ಮಡಿವಾಳ ಸಮುದಾಯ; ಎಚ್.ಎಂ. ಗೋಪಿಕೃಷ್ಣಗೆ MLC ಸ್ಥಾನ ಕೊಡುವಂತೆ ಆಗ್ರಹ]]></title>
            <link>https://kannada.asianetnews.com/gallery/karnataka-districts/chikkamagaluru-madivala-community-demands-mlc-seat-for-congress-leader-hm-gopikrishna-oaev6ge</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-madivala-community-demands-mlc-seat-for-congress-leader-hm-gopikrishna-oaev6ge</guid>
            <pubDate>Fri, 10 Jul 2026 17:17:59 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನಲ್ಲಿ, ತಮ್ಮನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡು ಅಧಿಕಾರ ಹಂಚಿಕೆಯಲ್ಲಿ ಕಡೆಗಣಿಸಲಾಗಿದೆ ಎಂದು ಮಡಿವಾಳ ಸಮುದಾಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಸಮುದಾಯದ ಮುಖಂಡ ಎಚ್.ಎಂ. ಗೋಪಿಕೃಷ್ಣ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx5xar40sq4rw40arrrwcdcn,imgname-chikkamagaluru-madiwala-press-meet-1783683702911.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರಿನಲ್ಲಿ, ತಮ್ಮನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡು ಅಧಿಕಾರ ಹಂಚಿಕೆಯಲ್ಲಿ ಕಡೆಗಣಿಸಲಾಗಿದೆ ಎಂದು ಮಡಿವಾಳ ಸಮುದಾಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಸಮುದಾಯದ ಮುಖಂಡ ಎಚ್.ಎಂ. ಗೋಪಿಕೃಷ್ಣ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು (ಜು.10): 'ಅಹಿಂದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಣ್ಣ ಸಣ್ಣ ಹಿಂದುಳಿದ ಸಮುದಾಯಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ' ಎಂದು ಮಡಿವಾಳ ಸಮುದಾಯದ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಸಮಯದಲ್ಲಿ ಮತ್ತು ಪಕ್ಷ ಸಂಘಟನೆಯ ವಿವಿಧ ಹಂತಗಳಲ್ಲಿ ಮಡಿವಾಳ ಸಮುದಾಯದ ಜನರು ಸಕ್ರಿಯವಾಗಿ ಶ್ರಮಿಸಿದ್ದಾರೆ. ಪಾದಯಾತ್ರೆ ಹಾಗೂ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರೂ, ಅಧಿಕಾರ ಹಂಚಿಕೆಯ ವಿಷಯಕ್ಕೆ ಬಂದಾಗ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ದೂರಿದರು.&lt;/p&gt;&lt;img&gt;&lt;p&gt;&lt;strong&gt;ಕಾಗದಕ್ಕೆ ಸೀಮಿತವಾದ 'ಸಮಪಾಲು-ಸಮಬಾಳು':&lt;/strong&gt;&lt;/p&gt;&lt;p&gt;'ಸರ್ಕಾರ ಹೇಳುವ 'ಎಲ್ಲರಿಗೂ ಸಮಪಾಲು, ಸಮಬಾಳು' ಎಂಬ ನೀತಿ ಕೇವಲ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ. ವಾಸ್ತವದಲ್ಲಿ ಹಿಂದುಳಿದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಣ್ಣ ಸಮುದಾಯಗಳ ನಿಷ್ಠಾವಂತ ನಾಯಕರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ' ಎಂದು ಹನುಮಂತಪ್ಪ ಬೇಸರ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;&lt;strong&gt;ಎಚ್.ಎಂ. ಗೋಪಿಕೃಷ್ಣಗೆ MLC ಸ್ಥಾನಕ್ಕಾಗಿ ಆಗ್ರಹ:&lt;/strong&gt;&lt;/p&gt;&lt;p&gt;ಮಡಿವಾಳ ಸಮುದಾಯದ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಎಚ್.ಎಂ. ಗೋಪಿಕೃಷ್ಣ ಅವರಿಗೆ ವಿಧಾನಪರಿಷತ್ ಸದಸ್ಯ (MLC) ಸ್ಥಾನವನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. 'ಕಳೆದ ಹದಿನೈದು ವರ್ಷಗಳಿಂದ ತರೀಕೆರೆ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗೋಪಿಕೃಷ್ಣ ಅವರು ರಾಜ್ಯಾದ್ಯಂತ ಸಮುದಾಯದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಿಷ್ಠೆ ಮತ್ತು ಸೇವೆಯನ್ನು ಪರಿಗಣಿಸಿ ಅವರಿಗೆ ವಿಧಾನಪರಿಷತ್&zwnj;ಗೆ ನಾಮನಿರ್ದೇಶನ ಮಾಡಬೇಕು' ಎಂದು ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ಸರ್ಕಾರದ ಇನ್ನುಳಿದ ಅವಧಿಯಲ್ಲಾದರೂ ಹಿಂದುಳಿದ ಮಡಿವಾಳ ಸಮುದಾಯಕ್ಕೆ ನ್ಯಾಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ತೀವ್ರ ಹೋರಾಟ ನಡೆಸುವ ಮುನ್ಸೂಚನೆಯನ್ನು ಮುಖಂಡರು ನೀಡಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-madivala-community-demands-mlc-seat-for-congress-leader-hm-gopikrishna-oaev6ge"/>
        </item>
        <item>
            <title><![CDATA[Breaking: ಕಾಫಿನಾಡಲ್ಲಿ ಕಾರ್ಮಿಕರ ಸೋಗಿನಲ್ಲಿದ್ದ ಐವರು ಅಕ್ರಮ ಬಾಂಗ್ಲಾದೇಶಿಯರ ಬಂಧನ!]]></title>
            <link>https://kannada.asianetnews.com/karnataka-districts/five-illega-bangladeshi-arested-in-chikkamaggaluru-rav/articleshow-obwys4r</link>
            <guid isPermaLink="true">https://kannada.asianetnews.com/karnataka-districts/five-illega-bangladeshi-arested-in-chikkamaggaluru-rav/articleshow-obwys4r</guid>
            <pubDate>Tue, 04 Aug 2026 13:39:18 +0530</pubDate>
            <description><![CDATA[&lt;p&gt;ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ, ಚಿಕ್ಕಮಗಳೂರಿನ ಮೂಡಿಗೇರೆ ತಾಲೂಕಿನ ಕಾಫಿ ತೋಟದಲ್ಲಿ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಐವರು ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ, ಮಲೆನಾಡಲ್ಲಿ ಅಕ್ರಮ ವಲಸಿಗರಿದ್ದಾರೆ ಎಂಬ ಹಿಂದೂ ಸಂಘಟನೆಗಳ ಆರೋಪಗಳಿಗೆ ಪುಷ್ಟಿ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz5x10scgkgbr7bpv1nmykzq,imgname-----------------------2026-08-04t133432.003-1785830867756.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಆ.4):&lt;/strong&gt; ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೇರೆ ತಾಲೂಕಿನ ಬಣಕಲ್ ಸಮೀಪದ ತೋಟದಲ್ಲಿ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಐವರು ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;p&gt;ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕಾಫಿನಾಡು ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಐವರನ್ನ ಬಂಧಿಸಲಾಗಿದ್ದು ಇನ್ನಷ್ಟು ಮಂದಿ ಇರುವ ಶಂಕೆ ಹಿನ್ನೆಲೆ ಬಂಧಿತ ಐವರು ಅಕ್ರಮ ಬಾಂಗ್ಲಾದೇಶಿಯರನ್ನ ತೀವ್ರ ವಿಚಾರಣೆಗೊಳಪಡಿಸಲಿದ್ದಾರೆ. ಸದ್ಯ ಬಂಧಿತರು ಡಿ.ಆರ್. ಪೊಲೀಸ್ ಠಾಣೆಯಲ್ಲಿದ್ದಾರೆ. ಮುಂದಿನ ಕ್ರಮಕ್ಕಾಗಿ ಪೊಲೀಸ್ ಇಲಾಖೆಯಿಂದ ಜಿಲ್ಲಾಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಅಕ್ರಮ ಬಾಂಗ್ಲಾದೇಶಿಯರ ಮಾಹಿತಿ ನೀಡಿದವರ ವಿರುದ್ಧವೇ ದೂರು! ಪೊಲೀಸರ ನಡೆ, ಸರ್ಕಾರದ ಓಲೈಕೆ ವಿರುದ್ಧ ಹೈ ಗರಂ&lt;/p&gt;&lt;h2&gt;ಬಿಜೆಪಿ, ಬಜರಂಗದಳ ಆರೋಪ ನಿಜವಾಯ್ತು!&lt;/h2&gt;&lt;p&gt;ಮಲೆನಾಡಿನ ಕಾಫಿ ತೋಟಗಳಲ್ಲಿ ಕಾರ್ಮಿಕರ ಸೋಗಿನಲ್ಲಿ ಸಾವಿರಾರು ಅಕ್ರಮ ಬಾಂಗ್ಲಾ ನಿವಾಸಿಗಳಿದ್ದಾರೆ, ಪತ್ತೆ ಹಚ್ಚಿ ಗಡಿಪಾರು ಮಾಡುವಂತೆ ಹಿಂದಿನಿಂದಲೂ ಬಿಜೆಪಿ ಭಜರಂಗದಳ ಕಾರ್ಯಕರ್ತರು ಆರೋಪ ಮಾಡಿದ್ದರು. ಇದೀಗ ಕೇಂದ್ರ ಗುಪ್ತಚರ ಮಾಹಿತಿ ಹಿನ್ನೆಲೆ ಆರೋಪಗಳಿಗೆ ಪುಷ್ಠಿ ನೀಡಿದಂತಾಗಿದೆ. ಪೊಲೀಸರು ಅಲರ್ಟ್ ಆಗಿದ್ದು ಇನ್ನಷ್ಟು ಅಕ್ರಮ ಬಾಂಗ್ಲಾದೇಶಿಯರ ಪತ್ತೆ ಮುಂದಾಗಿದ್ದಾರೆ.&lt;/p&gt;&lt;p&gt;ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಎಸ್&zwnj;ಐಅರ್ ಪ್ರಕ್ರಿಯೆ ಆರಂಭಿಸಿದ ಬಳಿಕ ಸಾವಿರಾರು ಜನರು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಯ್ತು. ಇನ್ನು ಕೆಲವರು ಬಾಂಗ್ಲಾದೇಶಕ್ಕೆ ವಾಪಸ್ ಆಗದೆ ರೈಲುಗಳ ಮೂಲಕ ಬೆಂಗಳೂರು, ಮಂಗಳೂರು ತಲುಪಿ ಅಲ್ಲಿಂದ ಕೊಡಗು, ಮಲೆನಾಡು ಭಾಗಗಳಲ್ಲಿ ಕಾರ್ಮಿಕರ ಸೋಗಿನಲ್ಲಿ ನುಸುಳಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡುತ್ತ ಬಂದಿವೆ. ಬೆಂಗಳೂರಿನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಸರ್ಕಾರ ಅಕ್ರಮ ಬಾಂಗ್ಲಾದೇಶಿಯರನ್ನ ಗಡಿಪಾರು ಮಾಡುವ ಬದಲು ಪತ್ತೆ ಹಚ್ಚಿದವರನ್ನೇ ಬೆದರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಮಲೆನಾಡ ಭಾಗದಲ್ಲಿ ಐವರು ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ ಹಿನ್ನೆಲೆ ಆತಂಕ ಶುರುವಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/five-illega-bangladeshi-arested-in-chikkamaggaluru-rav/articleshow-obwys4r"/>
        </item>
        <item>
            <title><![CDATA[School Holiday Declare: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಆದೇಶ ಹೊರಡಿಸಿದ 4 ಜಿಲ್ಲೆಗಳ ಜಿಲ್ಲಾಧಿಕಾರಿಗಳು!]]></title>
            <link>https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</link>
            <guid isPermaLink="true">https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g</guid>
            <pubDate>Sun, 02 Aug 2026 23:10:40 +0530</pubDate>
            <description><![CDATA[ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಉತ್ತರ ಕನ್ನಡ ಜಿಲ್ಲೆಗಳ ಆಯ್ದ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz1rv26za6zwc62ygmsz1c1j,imgname-school-holiday-declare-1785692260575.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ (Karnataka) ಕರಾವಳಿ (Coastal Karnataka) ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ (Heavy Rain) ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ (Dakshina Kannada) ಮತ್ತು ಚಿಕ್ಕಮಗಳೂರು (Chikkamagaluru) ಶಿವಮೊಗ್ಗ, ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕೆಲವು ಪ್ರದೇಶಗಳಲ್ಲಿ ಪಿಯುಸಿ (PUC) ಕಾಲೇಜುಗಳಿಗೆ ರಜೆ (School Holiday) ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಜೆ&lt;/strong&gt;&lt;/h2&gt;&lt;p&gt;ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (Deputy Commissioner) ದರ್ಶನ್ ಎಚ್.ವಿ. (Darshan H.V.) ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು (Mangaluru) ಉಪವಿಭಾಗದ ಮಂಗಳೂರು, ಉಳ್ಳಾಲ (Ullal), ಮೂಡಬಿದಿರೆ (Moodbidri), ಬಂಟ್ವಾಳ (Bantwal) ಹಾಗೂ ಮುಲ್ಕಿ (Mulki) ತಾಲೂಕುಗಳಲ್ಲಿ ಅಂಗನವಾಡಿಯಿಂದ ಹೈಸ್ಕೂಲ್ (High School) ವರೆಗೆ ರಜೆ ಘೋಷಿಸಲಾಗಿದೆ.&lt;/p&gt;&lt;p&gt;ಇನ್ನೊಂದೆಡೆ ಪುತ್ತೂರು (Puttur) ಉಪವಿಭಾಗದ ಪುತ್ತೂರು, ಬೆಳ್ತಂಗಡಿ (Belthangady), ಕಡಬ (Kadaba) ಹಾಗೂ ಸುಳ್ಯ (Sulya) ತಾಲೂಕುಗಳಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು (PUC) ವರೆಗೆ ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿಯಲ್ಲೂ ರಜೆ&lt;/strong&gt;&lt;/h2&gt;&lt;p&gt;ಕಾಫಿನಾಡು (Coffee Land) ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪ (Koppa) ಹಾಗೂ ಶೃಂಗೇರಿ (Sringeri) ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ (Primary School) ಮತ್ತು ಪ್ರೌಢಶಾಲೆಗಳಿಗೆ (High School) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ (Deputy Commissioner) ಭನ್ವರ್ ಸಿಂಗ್ ಮೀನಾ (Bhanwar Singh Meena) ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು&lt;/strong&gt;&lt;/h3&gt;&lt;p&gt;ನಿರಂತರ ಮಳೆಯ ಪರಿಣಾಮ ತುಂಗಾ ನದಿ (Tunga River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು (Public) ಹಾಗೂ ಪ್ರವಾಸಿಗರು (Tourists) ನದಿ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಹವಾಮಾನ ಇಲಾಖೆಯ (Weather Department) ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ&lt;/strong&gt;&lt;/h2&gt;&lt;p&gt;ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagar) ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ತಾಲೂಕು ಆಡಳಿತವು ರಜೆ ಘೋಷಿಸಿದೆ.&lt;/p&gt;&lt;p&gt;ಸಾಗರ ತಹಶೀಲ್ದಾರ್ (Tahsildar) ಡಾ. ಪ್ರತಿಭಾ (Dr. Prathibha) ಅವರು ಹೊರಡಿಸಿರುವ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools), ಪ್ರೌಢಶಾಲೆಗಳು (High Schools), ಪದವಿ ಪೂರ್ವ ಕಾಲೇಜುಗಳು (PU Colleges), ಡಿಪ್ಲೊಮಾ ಕಾಲೇಜುಗಳು (Diploma Colleges) ಹಾಗೂ ಐಟಿಐ (ITI) ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೂ ರಜೆ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಸುರಿಯುತ್ತಿರುವ ಭಾರೀ ಮಳೆ (Heavy Rain) ಹಿನ್ನೆಲೆ ಜಿಲ್ಲಾಡಳಿತ (District Administration) ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ (Deputy Commissioner) ಲಕ್ಷ್ಮೀ ಪ್ರಿಯಾ (Lakshmi Priya) ಅವರು ಹೊರಡಿಸಿರುವ ಆದೇಶದಂತೆ ದಾಂಡೇಲಿ (Dandeli) ಹಾಗೂ ಜೋಯಿಡಾ (Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು (Anganwadi Centres), ಪ್ರಾಥಮಿಕ ಶಾಲೆಗಳು (Primary Schools) ಮತ್ತು ಪ್ರೌಢಶಾಲೆಗಳಿಗೆ (High Schools) ಆಗಸ್ಟ್ 3ರಂದು ರಜೆ ಘೋಷಿಸಲಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/karnataka-heavy-rain-shivamogga-mangaluru-chikkamagaluru-uttara-kannada-school-holiday-declare/articleshow-p0ex22g"/>
        </item>
        <item>
            <title><![CDATA[ಹೆಂಗಸರ ನೈಟಿ ತೊಟ್ಟು ಬಂದು ದೇವರ ಹುಂಡಿಗೆ ಕನ್ನ ಹಾಕಿದ ಖದೀಮ! CCTVಯಲ್ಲಿ ಚೋರನ ಕೃತ್ಯ ಸೆರೆ]]></title>
            <link>https://kannada.asianetnews.com/gallery/karnataka-districts/chikkamagalluru-ajjampura-temple-hundi-theft-nighty-thief-cctv-viral-kannada-news-p1y2qku</link>
            <guid isPermaLink="true">https://kannada.asianetnews.com/gallery/karnataka-districts/chikkamagalluru-ajjampura-temple-hundi-theft-nighty-thief-cctv-viral-kannada-news-p1y2qku</guid>
            <pubDate>Sun, 26 Jul 2026 12:15:28 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಶಂಕರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುತು ಸಿಗಬಾರದೆಂದು ನೈಟಿ ಧರಿಸಿ ಬಂದ ಕಳ್ಳ, ಹುಂಡಿಯಲ್ಲಿದ್ದ ನೋಟುಗಳನ್ನು ಮಾತ್ರ ಕದ್ದು ಚಿಲ್ಲರೆ ನಾಣ್ಯಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyej7zmh3yt7vm1qy56f72cz,imgname-chikkamagaluru-temple-hundi-theft-1785047809681.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರಿನ ಶಂಕರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುತು ಸಿಗಬಾರದೆಂದು ನೈಟಿ ಧರಿಸಿ ಬಂದ ಕಳ್ಳ, ಹುಂಡಿಯಲ್ಲಿದ್ದ ನೋಟುಗಳನ್ನು ಮಾತ್ರ ಕದ್ದು ಚಿಲ್ಲರೆ ನಾಣ್ಯಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಚಿಕ್ಕಮಗಳೂರು (ಜು.26): ದೇ&lt;/strong&gt;ವಸ್ಥಾನಗಳಲ್ಲಿ ಕಳ್ಳತನ ನಡೆಯುವುದು ಹೊಸದೇನಲ್ಲ. ಆದರೆ, ಪತ್ತೆಯಾಗಬಾರದು ಎಂದು ಕಳ್ಳರು ಹೂಡುವ ತಂತ್ರಗಳು ಮಾತ್ರ ಪೊಲೀಸರಿಗಷ್ಟೇ ಅಲ್ಲದೆ ಸಾರ್ವಜನಿಕರಿಗೂ ಅಚ್ಚರಿ ಮೂಡಿಸುತ್ತವೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹುದೇ ಒಂದು ವಿಚಿತ್ರ ಹಾಗೂ ಕತರ್ ನಾಕ್ ಕಳ್ಳತನ ಘಟನೆ ನಡೆದಿದ್ದು, ಕಳ್ಳನ ನೈಟಿ ಜಿಮಿಕ್ ಕಂಡು ಗ್ರಾಮಸ್ಥರು ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದಾರೆ!&lt;/p&gt;&lt;img&gt;&lt;p&gt;&lt;strong&gt;ನೈಟಿ ಧರಿಸಿ ಬಂದ ಖದೀಮ!&lt;/strong&gt;&lt;/p&gt;&lt;p&gt;ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರ (Ajjampura) ತಾಲೂಕಿನ ಜಲ್ಲದೀಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಸಿದ್ಧ ಶಂಕರಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ (Shankaralingeshwara Swamy Temple) ಮಧ್ಯರಾತ್ರಿ ನುಗ್ಗಿದ ಕಳ್ಳ, ದೇವರ ಹುಂಡಿಗೆ ಕನ್ನ ಹಾಕಿದ್ದಾನೆ. ಆದರೆ, ಇಲ್ಲಿ ವಿಶೇಷ ಏನೆಂದರೆ ತನ್ನ ಗುರುತು ಸಿಗಬಾರದು ಎಂಬ ಕಾರಣಕ್ಕೆ ಈತ ಮಹಿಳೆಯರು ಧರಿಸುವ 'ನೈಟಿ' (Nighty) ತೊಟ್ಟು ಬಂದಿದ್ದನು!&lt;/p&gt;&lt;img&gt;&lt;p&gt;&lt;strong&gt;ನೋಟು ಲಪಟಾಯಿಸಿ, ಚಿಲ್ಲರೆ ಅಲ್ಲೇ ಬಿಟ್ಟ!&lt;/strong&gt;&lt;/p&gt;&lt;p&gt;ಮೊನ್ನೆ ಮಧ್ಯರಾತ್ರಿ ಸುಮಾರು 1:45 ರ ವೇಳೆಗೆ ದೇವಸ್ಥಾನದ ಆವರಣಕ್ಕೆ ನುಗ್ಗಿದ ಈ ಖದೀಮ, ಮೈ ಮೇಲೆಲ್ಲಾ ಹೊದಿಕೆ ಹಾಕ್ಕೊಂಡು ಅತಿ ಚಾಣಾಕ್ಷತನದಿಂದ ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾನೆ. ಹುಂಡಿಯಲ್ಲಿದ್ದ ಕಾಗದದ ನೋಟುಗಳನ್ನು ಮಾತ್ರ ಕಳವು ಮಾಡಿ, ಚಿಲ್ಲರೆ ನಾಣ್ಯಗಳನ್ನು (Coins) ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.&lt;/p&gt;&lt;img&gt;&lt;p&gt;&lt;strong&gt;CCTVಯಲ್ಲಿ ಸೆರೆಯಾಯ್ತು ಕಳ್ಳನ ಕಿಲಾಡಿ ಆಟ!&lt;/strong&gt;&lt;/p&gt;&lt;p&gt;ಕಳ್ಳತನದ ಸಂಪೂರ್ಣ ದೃಶ್ಯಾವಳಿಗಳು ದೇವಸ್ಥಾನದ ಸಿಸಿಟಿವಿ (CCTV Camera) ಕ್ಯಾಮೆರಾದಲ್ಲಿ ಸೆರೆಯಾಗಿವೆ. ನೈಟಿ ಧರಿಸಿ, ಮುಖ ಮುಚ್ಚಿಕೊಂಡು ಹುಂಡಿ ಒಡೆಯುವ ಕಳ್ಳನ ಕೃತ್ಯ ಈಗ ವೈರಲ್ ಆಗಿದೆ. ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಹಾಗೂ ಸ್ಥಳೀಯರು ಹುಂಡಿ ಒಡೆದಿರುವುದನ್ನು ನೋಡಿ ತಕ್ಷಣ ಅಜ್ಜಂಪುರ ಪೊಲೀಸ್ ಠಾಣೆಗೆ (Ajjampura Police Station) ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;ಜಲದಿಹಳ್ಳಿ ಗ್ರಾಮಸ್ಥರ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಅಜ್ಜಂಪುರ ಪೊಲೀಸರು, ಸಿಸಿಟಿವಿ ಫೂಟೇಜ್ (CCTV Footage) ಆಧರಿಸಿ ಈ ಕತರ್ ನಾಕ್ 'ನೈಟಿ ಕಳ್ಳ'ನ ಪತ್ತೆಗಾಗಿ ಬಲೆ ಬೀಸಿದ್ದಾರೆ. ದೇವರ ಆಸ್ತಿಗೇ ಕನ್ನ ಹಾಕಿದ ಈ ಖದೀಮನ ವಿಚಿತ್ರ ಐಡಿಯಾ ಈಗ ಜಿಲ್ಲಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿ&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagalluru-ajjampura-temple-hundi-theft-nighty-thief-cctv-viral-kannada-news-p1y2qku"/>
        </item>
        <item>
            <title><![CDATA[ಪೌರ ಕಾರ್ಮಿಕರು, ಆಟೋ ಡ್ರೈವರ್, ಗೃಹಿಣಿಯರ ಖಾತೆಯಲ್ಲಿ 34, 29, 26 ಲಕ್ಷ ಹಣ; ಮತ್ತೊಂದು ಬ್ಯಾಂಕ್ ಹಗರಣ ಬಯಲು!]]></title>
            <link>https://kannada.asianetnews.com/karnataka-districts/chikkamagaluru-bank-account-fraud-poor-people-targeted-dubai-link-money-laundering/articleshow-qu792ff</link>
            <guid isPermaLink="true">https://kannada.asianetnews.com/karnataka-districts/chikkamagaluru-bank-account-fraud-poor-people-targeted-dubai-link-money-laundering/articleshow-qu792ff</guid>
            <pubDate>Tue, 14 Jul 2026 20:43:05 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ ಬಡ ಕಾರ್ಮಿಕರು, ಗೃಹಿಣಿಯರಿಗೆ ಸಾಲದ ಆಮಿಷವೊಡ್ಡಿ ಅವರ ಬ್ಯಾಂಕ್ ಖಾತೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಅಂತರರಾಷ್ಟ್ರೀಯ ಜಾಲವೊಂದು ಬಯಲಾಗಿದೆ. ದುಬೈ ನಂಟು ಹೊಂದಿರುವ ಈ ಹಗರಣದಲ್ಲಿ ಅಮಾಯಕರು ಸಂಕಷ್ಟಕ್ಕೆ ಸಿಲುಕಿದ್ದು, ಪೊಲೀಸರು ಹಲವರನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxgjmez21y6f6graesry5rk2,imgname-chikkamagaluru-bank-scam-1784041585634.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ- ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಜು.14): ಕಾ&lt;/strong&gt;ಫಿನಾಡು ಚಿಕ್ಕಮಗಳೂರಿನಲ್ಲಿ ಬಡವರ ಹೆಸರನ್ನೇ ಬಂಡವಾಳ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಕೋಟ್ಯಂತರ ರೂಪಾಯಿ ಮಹಾ ಹಗರಣವೊಂದು ಬಯಲಿಗೆ ಬಂದಿದೆ. ದಿನಗೂಲಿ ಮಾಡುವ ಕಾರ್ಮಿಕರು, ಆಟೋ ಡ್ರೈವರ್ಗಳು ಹಾಗೂ ಗೃಹಿಣಿಯರ ಬ್ಯಾಂಕ್ ಖಾತೆಗಳನ್ನೇ ಟಾರ್ಗೆಟ್ ಮಾಡಿರುವ ಸೈಬರ್ ಕಿಡಿಗೇಡಿಗಳು, ಅವರಿಗೆ ಗೊತ್ತಿಲ್ಲದಂತೆ ಕೋಟಿ ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ. ಲೋನ್ ಕೊಡಿಸುವುದಾಗಿ ಮತ್ತು ಹಣದ ಆಸೆ ತೋರಿಸಿ ಆಧಾರ್ ಕಾರ್ಡ್ ಪಡೆದು ಅಧಿಕೃತವಾಗಿಯೇ ಬ್ಯಾಂಕ್ ಅಕೌಂಟ್ ಓಪನ್ ಮಾಡಿಸಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ದುಬೈ ಲಿಂಕ್ ಹೊಂದಿರುವ ಈ ಬೃಹತ್ ಜಾಲದ ಕರಾಳ ಮುಖದ ಕುರಿತು ಒಂದು ವರದಿ ಇಲ್ಲಿದೆ ನೋಡಿ.&lt;/p&gt;&lt;h2&gt;&lt;strong&gt;ಪೌರ ಕಾರ್ಮಿಕನ ಖಾತೆಯಲ್ಲಿ 34 ಲಕ್ಷ ರೂ.&lt;/strong&gt;&lt;/h2&gt;&lt;p&gt;ಗೃಹಿಣಿ ಹೆಸರಲ್ಲಿ 29 ಲಕ್ಷ ರೂಪಾಯಿ, ಆಟೋ ಡ್ರೈವರ್ ಹೆಸರಲ್ಲಿ 26 ಲಕ್ಷ ರೂಪಾಯಿ, ಪೌರ ಕಾರ್ಮಿಕನ ಹೆಸರಲ್ಲಿ 34 ಲಕ್ಷ ರೂಪಾಯಿ. ಇದು ಚಿಕ್ಕಮಗಳೂರಿನಲ್ಲಿ ಬಡವರ ಬ್ಯಾಂಕ್ ಖಾತೆಗಳಲ್ಲಿ ಒಂದೇ ತಿಂಗಳಲ್ಲಿ ನಡೆದಿರುವ ಅಕ್ರಮ ಡಿಜಿಟಲ್ ಕರಾಮತ್ತು. ಏನೂ ಅರಿಯದ ನಿರಪರಾಧಿ ಬಡ ಯುವಕರು ಮತ್ತು ಕಾರ್ಮಿಕರಿಗೆ ಲೋನ್ ಕೊಡಿಸುವ ಆಮಿಷ ಒಡ್ಡಿ, ಕೆಲವೇ ಕೆಲವು ರೂಪಾಯಿಗಳ ಕಮಿಷನ್ ಆಸೆ ತೋರಿಸಿ ಆಧಾರ್ ಕಾರ್ಡ್ಗಳನ್ನು ಸಂಗ್ರಹಿಸಲಾಗಿದೆ. ಬಳಿಕ ಬ್ಯಾಂಕ್ ಸಿಬ್ಬಂದಿಗಳ ನೆರವಿನೊಂದಿಗೆ ಅಧಿಕೃತವಾಗಿಯೇ ಹತ್ತಾರು ಬ್ಯಾಂಕ್ ಖಾತೆಗಳನ್ನು ತೆರೆದು, ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್&zwnj;ಗಳಿಗಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಣದ ಆಸೆಗೆ ಬಿದ್ದ ಕೆಲ ಯುವಕರು ಒಬ್ಬೊಬ್ಬರೇ 50ಕ್ಕೂ ಹೆಚ್ಚು ಖಾತೆಗಳನ್ನು ಮಾಡಿಸಿಕೊಟ್ಟಿದ್ದು, ಒಂದು ಖಾತೆಯಲ್ಲಿ ಬರೋಬ್ಬರಿ 20 ರಿಂದ 30 ಲಕ್ಷದವರೆಗೆ ವಹಿವಾಟು ನಡೆಸಲಾಗಿದೆ. ಹಗರಣದ ಅಸಲಿ ಕಥೆ ಗೊತ್ತಿಲ್ಲದ ರಾಜ್ಯದ ಸೈಬರ್ ಪೊಲೀಸರು ನೋಟೀಸ್ ಕೊಡುತ್ತಿದ್ದಂತೆ ಬಡ ಖಾತೆದಾರರು ಸದ್ಯ ಕಂಗಾಲಾಗಿದ್ದಾರೆ.&lt;/p&gt;&lt;h2&gt;&lt;strong&gt;ರಾಷ್ಟ್ರ ಮಟ್ಟದ ಹಗರಣ&lt;/strong&gt;&lt;/h2&gt;&lt;p&gt;ಈ ಹಗರಣ ಕೇವಲ ಚಿಕ್ಕಮಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಪ್ರಕರಣ ಇಂಟರ್ ಸ್ಟೇಟ್ ಹಾಗೂ ಇಂಟರ್ ನ್ಯಾಷನಲ್ ಲೆವೆಲ್ ತಲುಪಿದೆ. ವಿವಿಧ ರಾಜ್ಯಗಳಲ್ಲಿ ಈ ಖಾತೆಗಳ ಮೂಲಕ ಸೈಬರ್ ವಂಚನೆ ನಡೆದಿದೆ. ಈಗಾಗಲೇ ಬಡವರ ಖಾತೆಗಳ ಲಿಂಕ್ ಹಿಡಿದು ಬರೋಬ್ಬರಿ 6 ರಾಜ್ಯಗಳ ಸೆನ್ ಪೊಲೀಸರು ಚಿಕ್ಕಮಗಳೂರಿನ ಬಡವರ ಮನೆ ಬಾಗಿಲಿಗೆ ಬಂದು ನಿಂತಿದ್ದಾರೆ. ತನಿಖೆ ತೀವ್ರಗೊಳ್ಳುತ್ತಿದ್ದಂತೆ ಬಡವರ ಎದೆ ಒಡೆದು ಹೋಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ಒಳಗೊಂಡಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;h2&gt;&lt;strong&gt;ರಾಜಕೀಯ ಮುಖಂಡರ ನಂಟು&lt;/strong&gt;&lt;/h2&gt;&lt;p&gt;ಇನ್ನು ಬಂಧಿತರು ವಿಚಾರಣೆ ವೇಳೆ ನಗರಸಭೆಯ ಜೆಡಿಎಸ್ ಸದಸ್ಯ ಗೋಪಿ ಹೆಸರನ್ನು ಬಾಯಿಬಿಟ್ಟಿರುವುದು ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್ ನೀಡಿದೆ. ಈ ಮಹಾ ಹಗರಣದ ಸೂತ್ರಧಾರಿಗಳು ದುಬೈನಲ್ಲಿ ಕುಳಿತು ಇಡೀ ಜಾಲವನ್ನು ಆಪರೇಟ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಗಂಭೀರ ಆರೋಪ ಮಾಡಿದ್ದಾರೆ. ಕೆಲವರ ದಿಢೀರ್ ಆದಾಯದ ಮೂಲ ಹಾಗೂ ಬ್ಯಾಂಕ್ ಸಿಬ್ಬಂದಿಗಳ ಪಾತ್ರದ ಬಗ್ಗೆ ಸಮಗ್ರ ತನಿಖೆಯಾಗಬೇಕು. ವಿಧಾನಸೌಧದಲ್ಲಿ ಕೂತವರ ಕೈವಾಡದ ಬಗ್ಗೆಯೂ ಅನುಮಾನವಿದ್ದು, ಯಾವುದೇ ಪಕ್ಷದವರಾಗಿದ್ದರೂ ತಪ್ಪಿತಸ್ಥರನ್ನು ಬಿಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಸಿಬಿಐ ಹಾಗೂ ಇಡಿ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ನೀಡಲು ಸಿ.ಟಿ. ರವಿ ಮುಂದಾಗಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ ಆಮಿಷಕ್ಕೆ ಬಲಿಯಾಗಿ ಬ್ಯಾಂಕ್ ಖಾತೆ, ಆಧಾರ್ ಕೊಟ್ಟ ಅಮಾಯಕರು ಈಗ ಜೈಲು ಪಾಲಾಗುವ ಭೀತಿಯಲ್ಲಿದ್ದಾರೆ. ದಿಢೀರ್ ಶ್ರೀಮಂತರಾಗಲು ಹೊರಟ ಸೂತ್ರಧಾರಿಗಳ ಅಂತರರಾಷ್ಟ್ರೀಯ ಜಾಲ ಈಗ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದು, ಮುಂದಿನ ತನಿಖೆಯಿಂದಷ್ಟೇ ದುಬೈ ಲಿಂಕ್&zwnj;ನ ಅಸಲಿ ಸತ್ಯ ಹೊರಬರಬೇಕಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-bank-account-fraud-poor-people-targeted-dubai-link-money-laundering/articleshow-qu792ff"/>
        </item>
        <item>
            <title><![CDATA[ಇನ್ನೂ ಎಷ್ಟು ದಿನ ಮಳೆ ಸುರಿಯುತ್ತೆ..? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?]]></title>
            <link>https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</link>
            <guid isPermaLink="true">https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn</guid>
            <pubDate>Mon, 03 Aug 2026 10:52:13 +0530</pubDate>
            <description><![CDATA[&lt;p&gt;ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತಗೊಂಡಿದ್ದು, ಬಂಟ್ವಾಳದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೂ ಕಾರ್ಕಳದಲ್ಲಿ ಕಿರು ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz313w30f1gdqv7pkgfgntfd,imgname-rain--1--1785734492255.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು/ಕಾರವಾರ: &lt;/strong&gt;ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದೂ ಕೂಡ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಇಂದು ಆರೆಂಜ್ ಅಲರ್ಟ್, ನಾಳೆ ಎಲ್ಲೋ ಅಲರ್ಟ್&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್' ಘೋಷಿಸಲಾಗಿದ್ದು, ನಾಳೆಯಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ.&lt;/p&gt;&lt;h2&gt;&lt;strong&gt;ಶಿರಸಿ-ಹುಬ್ಬಳ್ಳಿ ರಸ್ತೆ ಜಲಾವೃತ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ಕೋಟೆ ಕೆರೆ ತುಂಬಿ ಹರಿಯುತ್ತಿದ್ದು, ನೀರು ರಸ್ತೆಗೆ ನುಗ್ಗಿದೆ. ಹಲವು ಬಡಾವಣೆಗಳು ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ.&lt;/p&gt;&lt;p&gt;ಇತ್ತ ದಾಂಡೇಲಿಯಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಗೆ ಮಸಿದಿಗಲ್ಲಿಯ ಯುಸೂಫ್ ಶೇಖ್ ಎಂಬುವವರ ಮನೆ ಕುಸಿದಿದೆ. ಮನೆಯಲ್ಲಿದ್ದ ಇಬ್ಬರು ವೃದ್ಧರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;/p&gt;&lt;h2&gt;&lt;strong&gt;ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು&lt;/strong&gt;&lt;/h2&gt;&lt;p&gt;ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಎಎಂಆರ್ (AMR) ಡ್ಯಾಂನಿಂದ ನೀರನ್ನು ಹೊರಬಿಡಲಾಗುತ್ತಿದ್ದು, ನೇತ್ರಾವತಿ ನದಿ ತೀರದ ಜನರಲ್ಲಿ ಆತಂಕ ಶುರುವಾಗಿದೆ. ಬಂಟ್ವಾಳದ ಅಲಡ್ಕ, ಬೋಗೋಡಿ, ನಂದಾವರ, ಗೂಡಿನಬಳಿ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾಗಿದ್ದಾರೆ.&lt;/p&gt;&lt;h2&gt;&lt;strong&gt;ಸಂಪರ್ಕ ಕಡಿತಗೊಳಿಸಿದ ಕಿರು ಸೇತುವೆ&lt;/strong&gt;&lt;/h2&gt;&lt;p&gt;ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ನೀರಿನ ಮಟ್ಟ ಹೆಚ್ಚಾದ ಕಾರಣ ಇಲ್ಲಿನ ಕಿರು ಸೇತುವೆಯೊಂದು ಮುಳುಗಡೆಯಾಗಿದ್ದು, ಸ್ಥಳೀಯ ಗ್ರಾಮಸ್ಥರ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಹೊಳೆ-ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ನದಿ ಪಾತ್ರದ ಜನರು ಹಾಗೂ ಗುಡ್ಡಗಾಡು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;]]></content:encoded>
            <category>chikkamagalur</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/shivamogga/rain-alert-in-malenadu-and-karavali-reason-udupi-mangaluru-and-uttar-kannada-gkn/articleshow-rgg1vbn"/>
        </item>
        <item>
            <title><![CDATA[ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ನನ್ನ ಮೇಲೆ ಕೇಸ್‌ ಕೊಟ್ಟವನಿಗೂ ಏನು ಸಂಬಂಧ? ಪೊಲೀಸರು ತನಿಖೆ ಮಾಡಲಿ: ಸಿಟಿ ರವಿ]]></title>
            <link>https://kannada.asianetnews.com/karnataka-districts/ct-ravi-defended-his-controversy-statement-over-delhi-protests-at-chikkamagaluru/articleshow-tdxt56b</link>
            <guid isPermaLink="true">https://kannada.asianetnews.com/karnataka-districts/ct-ravi-defended-his-controversy-statement-over-delhi-protests-at-chikkamagaluru/articleshow-tdxt56b</guid>
            <pubDate>Sun, 26 Jul 2026 13:06:18 +0530</pubDate>
            <description><![CDATA[&lt;p&gt;ನೀಟ್ ಪೇಪರ್ ಲೀಕ್ ಪ್ರತಿಭಟನೆ ಕುರಿತು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಎಂಎಲ್&zwnj;ಸಿ ಸಿ.ಟಿ. ರವಿ ವಿರುದ್ಧ ಎಫ್&zwnj;ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ತಾವು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿದವರ ಬಗ್ಗೆ ಮಾತನಾಡಿದ್ದಾಗಿ ಸಮರ್ಥಿಸಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyems6f6zzhjpft703ypwn0f,imgname-----------------------2026-07-26t125053.384-1785050470886.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಜು.26):&lt;/strong&gt; ನೀಟ್ ಪೇಪರ್ ಲೀಕ್ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯ ಜಂತರ್&zwnj; ಮಂತರ್&zwnj;ನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ಕುರಿತು ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಎಂಎಲ್&zwnj;ಸಿ ಸಿಟಿ ರವಿ ವಿರುದ್ಧ ಪೊಲೀಸರು ಎಫ್&zwnj;ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿ ಪ್ರತಿಕ್ರಿಯಿಸಿರುವ ಸಿಟಿ ರವಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದು 'ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ' ಎಂದಿದ್ದಾರೆ.&lt;/p&gt;&lt;p&gt;ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಅವರು ಒತ್ತಾಯಿಸುತ್ತಿದ್ದಾರೆ. ನಾನು ಈ ಅನಕ್ಷರಸ್ಥ ಜನರನ್ನು ಕೇಳಲು ಬಯಸುತ್ತೇನೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೂ ಸಿಎಎ ಮತ್ತು ಎನ್&zwnj;ಆರ್&zwnj;ಸಿಗೂ ಏನು ಸಂಬಂಧ? ಸಿಎಎ ಮತ್ತು ಎನ್&zwnj;ಆರ್&zwnj;ಸಿಯನ್ನು ವಿರೋಧಿಸುವ ರಾಷ್ಟ್ರವಿರೋಧಿ ಅಂಶಗಳು ಮತ್ತು 'ತುಕ್ಡೆ ತುಕ್ಡೆ ಗ್ಯಾಂಗ್' ಸದಸ್ಯರು ಈ ಪ್ರತಿಭಟನೆಗಳಲ್ಲಿ ಭಾಗವಹಿಸಿ ಭಾಷಣ ಮಾಡುತ್ತಿದ್ದಾರೆ ಎಂದು ರವಿ ಹೇಳಿದ್ದಾರೆ.&lt;/p&gt;&lt;h2&gt;ಮುಲ್ಲಾನಿಗೂ ನನ್ನ ಮೇಲೆ ಕೇಸ್&zwnj; ಕೊಟ್ಟವನಿಗೂ ಏನು ಸಂಬಂಧ?&lt;/h2&gt;&lt;p&gt;ನನ್ನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ. ಪೆಟ್ರೋಲ್ ಟ್ಯಾಂಕ್&zwnj;ಗೆ ಕಡ್ಡಿ ಗೀರಲು ಹೋದ ಮುಲ್ಲಾನ ಬಗ್ಗೆ ನಾನು ಮಾತನಾಡಿದ್ದೇನೆ, ಜೀಪಿಗೆ ಬೆಂಕಿ ಹಚ್ಚು ಮುಲ್ಲಾನ ಬಗ್ಗೆ ಮಾತನಾಡಿದ್ದೇನೆ, ಸಾವಿರ ಮಾತನಾಡುತ್ತೇನೆ ಎಂದು ವಿಡಿಯೋ ಸಮೇತ ಸಾಕ್ಷಿ ತೋರಿಸಿದ ಸಿಟಿ ರವಿ ಅವರು, ನಾನು ದೇಶ ವಿರೋಧಿ ಮುಲ್ಲಾನ ಬಗ್ಗೆ ಮಾತನಾಡಿದ್ದೇನೆ, ಮುಸ್ಲಿಮರ ಬಗ್ಗೆ ಮಾತನಾಡಿಲ್ಲ. ಮುಸ್ಲಿಮರ ಬಗ್ಗೆ ಒಂದು ಪದವೂ ಮಾತನಾಡಿಲ್ಲ. ನಾಗರೀಕ, ದೇಶಭಕ್ತ, ನೀಟ್ ವಿದ್ಯಾರ್ಥಿಗಳು ಈ ರೀತಿ ಬೆಂಕಿ ಹಚ್ಚುವ ಕೆಲಸ ಮಾಡೋಲ್ಲ. ಸಂವಿಧಾನ ಕಾಳಜಿ ಇರೋರು ಇಂಥ ಕೆಲಸ ಮಾಡೋಲ್ಲ. ಅವನ ಎದೆ ಸೀಳಿದರೆ ಮೂರಕ್ಷರ ಇರಲ್ಲ, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿದವನ ಬಗ್ಗೆ ಮಾತನಾಡಿದರೆ ಕೇಸ್ ಹಾಕ್ತೀರಾ? ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್&zwnj; ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.&lt;/p&gt;&lt;h3&gt;ಪೊಲೀಸರ ನಡೆ ವಿರುದ್ಧವೂ ಸಿಟಿ ರವಿ ಕಿಡಿ&lt;/h3&gt;&lt;p&gt;ಅಕ್ರಮ ಬಾಂಗ್ಲಾದೇಶಿಗರ ಬಗ್ಗೆ ದೂರು ಕೊಟ್ರೆ ಸ್ವೀಕರಿಸಲ್ಲ. ಬೇರೆಯವರು ದೂರು ಕೊಟ್ರೆ ಎನ್&zwnj;ಸಿ ಕೊಡೋದು ಕಷ್ಟ. ವಿಪಕ್ಷ ನಾಯಕರು ದೂರು ಕೊಟ್ಟರೆ ದೂರು ದಾಖಲಿಸಲ್ಲ, ನೀವು ಇಡೀ ರಾತ್ರಿ ಡ್ರಾಮಾ ಮಾಡ್ತೀರಿ. ಅವರು ದೂರು ಕೊಟ್ರೆ ತಕ್ಷಣ ದೂರು ದಾಖಲಿಸುತ್ತೀರ? ಪೊಲೀಸ್ ಜೀಪಿಗೆ ಬೆಂಕಿ ಹಚ್ಚುವವನ ಬಗ್ಗೆ ಮಾತನಾಡಿದ್ರೆ ಎಫ್&zwnj;ಐಆರ್ ಮಾಡ್ತೀರಾ? ಕರ್ನಾಟಕ ಪೊಲೀಸರು ಏನು ಸಂದೇಶ ಕೊಡ್ತಿದ್ದಾರೆ ಎಂದು ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಘಟನೆ ಹಿನ್ನೆಲೆ&lt;/strong&gt;&lt;/p&gt;&lt;p&gt;ಚಿಕ್ಕಮಗಳೂರಿನಲ್ಲಿ ಯೂತ್ ಫಾರ್ ನೇಷನ್ ಸಂಘಟನೆ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, 'ಮುಲ್ಲಾಗಳಿಗೂ ನೀಟ್ ಪರೀಕ್ಷೆಗೂ ಸಂಬಂಧವೇನು? ಸಂಪೂರ್ಣವಾಗಿ ಅನಕ್ಷರಸ್ಥನಾದ ಒಬ್ಬ ಮುಲ್ಲಾ ಬಂದು ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾನೆ' ಎಂದು ರವಿ ಹೇಳಿದ್ದಾರೆಂದು ಆರೋಪಿಸಲಾಗಿತ್ತು. ಕೋಮು ವಿಷಯಗಳನ್ನು ನೀಟ್ ವಿವಾದಕ್ಕೆ ಎಳೆದು ತಂದಿದ್ದಕ್ಕಾಗಿ ರವಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಫೆಡರೇಶನ್ ಸರ್ಕಾರವನ್ನು ಒತ್ತಾಯಿಸಿತ್ತು. ಈ ಹಿನ್ನೆಲೆ ಚಿಕ್ಕಮಗಳೂರಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದ ನಿರ್ದೇಶನದ ಮೇರೆಗೆ ಚಿಕ್ಕಮಗಳೂರು ಪಟ್ಟಣ ಪೊಲೀಸರು ಸಿಟಿ ರವಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್&zwnj;ಎಸ್) ಸೆಕ್ಷನ್ 353(2) ರ ಅಡಿಯಲ್ಲಿ ಎಫ್&zwnj;ಐಆರ್ ಎಫ್&zwnj;ಐಆರ್ ದಾಖಲಿಸಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/ct-ravi-defended-his-controversy-statement-over-delhi-protests-at-chikkamagaluru/articleshow-tdxt56b"/>
        </item>
        <item>
            <title><![CDATA[ಭದ್ರಾ ನದಿ ಪ್ರವಾಹ: ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿ ಬೆಳೆದ ಅಡಿಕೆ, ಕಾಫಿ ತೋಟ ಕ್ಷಣಾರ್ಧದಲ್ಲಿ ಕೊಚ್ಚಿಹೋಯ್ತು!]]></title>
            <link>https://kannada.asianetnews.com/gallery/karnataka-districts/chikkamagaluru-kalasa-bhadra-river-flood-coffee-arecanut-farm-damage-heavy-rain-karnataka-tya8c0o</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-kalasa-bhadra-river-flood-coffee-arecanut-farm-damage-heavy-rain-karnataka-tya8c0o</guid>
            <pubDate>Sun, 02 Aug 2026 20:18:21 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಕಳಸ ತಾಲೂಕಿನಲ್ಲಿ ಭದ್ರಾ ನದಿ ಪ್ರವಾಹದಿಂದ ರೈತ ಅಶೋಕ್ ಅವರ ಸಂಪೂರ್ಣ ತೋಟ ನಾಶವಾಗಿದೆ. ಧರ್ಮಸ್ಥಳ ಸಂಘದಿಂದ ಸಾಲ ಪಡೆದು ಬೆಳೆದಿದ್ದ ಕಾಫಿ, ಅಡಿಕೆ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು, ಮನೆಗೂ ನೀರು ನುಗ್ಗಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ರೈತನ ಗೋಳು ನೀವೂ ಕೇಳಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz1atvk3yd6ht90hygw2vwf5,imgname-chikkamagaluru-farmer-crop-loss-by-rain--6--1785677573731.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರಿನ ಕಳಸ ತಾಲೂಕಿನಲ್ಲಿ ಭದ್ರಾ ನದಿ ಪ್ರವಾಹದಿಂದ ರೈತ ಅಶೋಕ್ ಅವರ ಸಂಪೂರ್ಣ ತೋಟ ನಾಶವಾಗಿದೆ. ಧರ್ಮಸ್ಥಳ ಸಂಘದಿಂದ ಸಾಲ ಪಡೆದು ಬೆಳೆದಿದ್ದ ಕಾಫಿ, ಅಡಿಕೆ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು, ಮನೆಗೂ ನೀರು ನುಗ್ಗಿ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ರೈತನ ಗೋಳು ನೀವೂ ಕೇಳಿ.&lt;/p&gt;&lt;img&gt;&lt;p&gt;&lt;strong&gt;ಚಿಕ್ಕಮಗಳೂರು (ಆ.02): &lt;/strong&gt;ಧರ್ಮಸ್ಥಳ ಸಂಘದಲ್ಲಿ (Dharmasthala Sangha) ಲಕ್ಷಾಂತರ ರೂ. ಸಾಲವನ್ನು ಮಾಡಿ, ಹೊಟ್ಟೆಬಟ್ಟೆ ಕಟ್ಟಿ ಮನೆಯ ಮುಂದೆ ತೆಂಗು, ಅಡಿಕೆ, ಕಾಫಿ, ಬಾಳೆ, ಏಲಕ್ಕಿ ಬೆಳೆಯನ್ನು ಬೆಳೆದಿದ್ದೆವು. ಇಷ್ಟು ವರ್ಷಗಳ ಶ್ರಮ ಇನ್ನೇನು ಫಲ ಕೊಡುತ್ತಿದೆ ಎನ್ನುವ ಈ ವರ್ಷದಲ್ಲಿ ಭಾರೀ ಮಳೆಯಿಂದಾಗಿ ಭದ್ರಾ ನದಿ (Bhadra River flood) &amp;nbsp;ಉಕ್ಕಿ ಹರಿದು ಕೇವಲ 2 ಗಂಟೆಗಳಲ್ಲಿ ಎಲ್ಲ ಬೆಳೆ ನಷ್ಟವಾಗಿದೆ. ಲಕ್ಷಾಂತರ ರೂ. ಸಾಲವನ್ನೂ ತೀರಿಸುವ ಒಂದೇ ಒಂದು ಆಸರೆಯೂ ದೂವರಾಗಿದ್ದು, ಬದುಕೇ ದುಸ್ತರವಾಗಿದೆ ಎಂದು ರೈತರು (Chikkamagaluru Farmer) ಗೋಳಾಡುವ ದೃಶ್ಯ ಮಾತ್ರ ನೋಡುಗರ ಕಣ್ಣಂಚಲ್ಲಿ ನೀರು ತರಿಸುತ್ತದೆ.&lt;/p&gt;&lt;img&gt;&lt;p&gt;ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ (Kalasa) ತಾಲೂಕಿನ ಸಂಸೆ (Samse) ಸಮೀಪದ ಹೊಸಮಠ (Hosamatha) ಗ್ರಾಮದಲ್ಲಿ ಭಾರೀ ಮಳೆ (Heavy Rain) ಮತ್ತು ಭದ್ರಾ (Bhadra River) ನದಿಯ ಪ್ರವಾಹ (Flood) ರೈತ ಕುಟುಂಬದ ಬದುಕನ್ನೇ ಅಸ್ತವ್ಯಸ್ತಗೊಳಿಸಿದೆ. ಭದ್ರಾ ನದಿಯ ನೀರು ಏಕಾಏಕಿ ಕೃಷಿ ತೋಟಕ್ಕೆ ನುಗ್ಗಿದ ಪರಿಣಾಮ ಕಾಫಿ (Coffee), ಅಡಿಕೆ (Arecanut), ಬಾಳೆ (Banana) ಹಾಗೂ ಏಲಕ್ಕಿ (Cardamom) ಬೆಳೆಗಳು ಸಂಪೂರ್ಣ ನಾಶವಾಗಿವೆ. ಜೊತೆಗೆ ರೈತನ ಮನೆಗೂ ನೀರು ನುಗ್ಗಿದ್ದು, ದವಸ-ಧಾನ್ಯ ಹಾಗೂ ಮನೆಯೊಳಗಿನ ಸಾಮಗ್ರಿಗಳೂ ನಾಶವಾಗಿವೆ. ಈ ಮೂಲಕ ರೈತನ ಕುಟುಂಬದ ಬದುಕು ಅಕ್ಷರಶಃ ಬೀದಿಗೆ ಬಂದಿದೆ.&lt;/p&gt;&lt;img&gt;&lt;p&gt;ಹೊಸಮಠ ಗ್ರಾಮದ ರೈತ ಅಶೋಕ್ (Ashok) ಅವರು ಹಲವು ವರ್ಷಗಳ ಶ್ರಮದಿಂದ ಬೆಳೆಸಿದ್ದ ತೋಟ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದೆ. ಮಣ್ಣು ಕೊಚ್ಚಿಕೊಂಡು ಹೋದ ಪರಿಣಾಮ ಬುಡ ಸಮೇತ ಕಾಫಿ (Coffee) ಮತ್ತು ಅಡಿಕೆ (Arecanut) ಸಸಿಗಳು ನೆಲಕ್ಕುರುಳಿದ್ದು, ಫಸಲಿಗೆ (Harvest) ಬಂದಿದ್ದ ಬೆಳೆ ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ (Agriculture) ಹಾನಿಯಾಗಿರುವುದಾಗಿ ಕುಟುಂಬ ಹೇಳಿಕೊಂಡಿದೆ.&lt;/p&gt;&lt;img&gt;&lt;p&gt;ಧರ್ಮಸ್ಥಳ ಸಂಘದಿಂದ ಸಾಲ ಪಡೆದು ತೋಟ ಅಭಿವೃದ್ಧಿ&lt;/p&gt;&lt;p&gt;ಅಶೋಕ್ ಅವರು ಧರ್ಮಸ್ಥಳ ಸಂಘ (Dharmasthala Sangha)ದಿಂದ ಸಾಲ (Loan) ಪಡೆದು ತೋಟವನ್ನು ಅಭಿವೃದ್ಧಿಪಡಿಸಿದ್ದರು. ಆದರೆ ಒಂದೇ ದಿನದ ಪ್ರವಾಹ (Flood) ಅವರ ಹಲವು ವರ್ಷಗಳ ಪರಿಶ್ರಮವನ್ನು ಮಣ್ಣಿನ ಪಾಲು ಮಾಡಿದೆ. ತೋಟದ ಈಗಿನ ಸ್ಥಿತಿಯನ್ನು ಕಂಡು ಅಶೋಕ್ ದಂಪತಿ ಕಣ್ಣೀರಿಟ್ಟಿದ್ದು, ಬದುಕು ಮತ್ತೆ ಹೇಗೆ ಕಟ್ಟಿಕೊಳ್ಳುವುದು ಎಂಬ ಆತಂಕದಲ್ಲಿದ್ದಾರೆ.&amp;nbsp;&lt;/p&gt;&lt;p&gt;ಪ್ರವಾಹದ ನೀರು (Flood Water) ತೋಟಕ್ಕೆ ಮಾತ್ರ ಸೀಮಿತವಾಗದೆ ಮನೆಯೊಳಗೂ ನುಗ್ಗಿದೆ. ಇದರಿಂದ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು (Household Items), ಅಗತ್ಯ ಸಾಮಗ್ರಿಗಳು ಹಾಗೂ ದೈನಂದಿನ ಬಳಕೆಯ ವಸ್ತುಗಳೂ ಹಾನಿಗೊಳಗಾಗಿವೆ. ಕುಟುಂಬ ಇದೀಗ ತೀವ್ರ ಸಂಕಷ್ಟವನ್ನು ಎದುರಿಸುತ್ತಿದೆ.&lt;/p&gt;&lt;img&gt;&lt;p&gt;ಸ್ಥಳೀಯ ಗ್ರಾಮಸ್ಥರು ಕೂಡ ಸರ್ಕಾರ (Government) ತಕ್ಷಣ ಹಾನಿಯ ಸಮೀಕ್ಷೆ (Survey) ನಡೆಸಿ ಸೂಕ್ತ ಪರಿಹಾರ (Compensation) ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಮಳೆ (Rain) ಮತ್ತು ಪ್ರವಾಹದ (Flood) ಹೊಡೆತಕ್ಕೆ ಕೃಷಿಯನ್ನೇ ನಂಬಿಕೊಂಡಿರುವ ಕುಟುಂಬಗಳ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಶೀಘ್ರ ಆರ್ಥಿಕ ನೆರವು (Financial Assistance) ನೀಡಬೇಕೆಂದು ಒತ್ತಾಯಿಸಿದ್ದಾರೆ.&lt;/p&gt;&lt;img&gt;&lt;p&gt;ಮಲೆನಾಡು (Malnad) ಭಾಗದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ (Heavy Rain) ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ರೈತರು ಹಾಗೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ. ಸ್ಥಳೀಯ ಆಡಳಿತ (District Administration) ಕೂಡ ಹಾನಿಯ ವಿವರಗಳನ್ನು ಸಂಗ್ರಹಿಸುವ ಕಾರ್ಯ ಆರಂಭಿಸಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-kalasa-bhadra-river-flood-coffee-arecanut-farm-damage-heavy-rain-karnataka-tya8c0o"/>
        </item>
        <item>
            <title><![CDATA[ಶಿವಮೊಗ್ಗ-ನರಸಿಂಹರಾಜಪುರ- ಕೊಪ್ಪ ಮಾರ್ಗವಾಗಿ ಶೃಂಗೇರಿ ರೇಲ್ವೆ ಮಾರ್ಗ; ಆಗುಂಬೆ ಸುರಂಗ ಮಾರ್ಗ]]></title>
            <link>https://kannada.asianetnews.com/karnataka-districts/indian-railways-route-to-sringeri-via-shivamogga-narasimharajapur-koppa-kota-srinivasa-pujari-letter-mrq/articleshow-ucxa6an</link>
            <guid isPermaLink="true">https://kannada.asianetnews.com/karnataka-districts/indian-railways-route-to-sringeri-via-shivamogga-narasimharajapur-koppa-kota-srinivasa-pujari-letter-mrq/articleshow-ucxa6an</guid>
            <pubDate>Mon, 20 Jul 2026 11:34:57 +0530</pubDate>
            <description><![CDATA[ಶಿವಮೊಗ್ಗದಿಂದ ಶೃಂಗೇರಿಗೆ ರೈಲು ಮಾರ್ಗ ಕಲ್ಪಿಸುವಂತೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುವ ಆತಂಕ ವ್ಯಕ್ತವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಯೋಜನೆ ರೂಪಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆಗುಂಬೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆಯೂ ಚರ್ಚೆ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxz1z8x5tsce76phwyt24182,imgname-indian-railways-1-1784527430565.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು:&lt;/strong&gt; ಶಿವಮೊಗ್ಗ- ನರಸಿಂಹರಾಜಪುರ- ಕೊಪ್ಪ ಮಾರ್ಗವಾಗಿ ಶೃಂಗೇರಿಗೆ ರೇಲ್ವೆ ಮಾರ್ಗ ನೀಡಬೇಕು ಎಂದು ಈ ಭಾಗದಿಂದ ಸಾರ್ವಜನಿಕರು ಮನವಿ ಸಲ್ಲಿಸಿದ್ದು ಈ ಬಗ್ಗೆ ರೇಲ್ವೆ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಚಿಕ್ಕಮಗಳೂರು- ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.&lt;/p&gt;&lt;h2&gt;&lt;strong&gt;ಪರಿಸರಕ್ಕೆ ಹಾನಿಯಾಗದಂತೆ ರೈಲು ಮಾರ್ಗ ಮಾಡಲು ಸಾಧ್ಯವೇ?&lt;/strong&gt;&lt;/h2&gt;&lt;p&gt;ಭಾನುವಾರ ಖಾಸಗಿ ಕಾರ್ಯಕ್ರಮಕ್ಕೆ ಮುತ್ತಿನಕೊಪ್ಪ ಆಗಮಿಸಿದ ಸಂದರ್ಭದಲ್ಲಿ ಎನ್.ಆರ್.ಪುರದಲ್ಲಿ ಸುದ್ದಿ ಗಾರ ರೊಂದಿಗೆ ಮಾತನಾಡಿ ಶೀಘ್ರದಲ್ಲೇ ದೆಹಲಿಗೆ ಹೋಗಿ ರೇಲ್ವೆ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ. ಈಗಾಗಲೇ ಪರಿಸರ ವಾದಿಗಳು ರೇಲ್ವೆ ಮಾರ್ಗ ಆದರೆ ಪರಿಸರ ಹಾಳಾಗುತ್ತದೆ ಎಂದು ಎಚ್ಚರಿಕೆ ಕೊಡುತ್ತಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ ರೈಲು ಮಾರ್ಗ ಮಾಡಲು ಸಾಧ್ಯವೇ ಎಂಬುದನ್ನು ರೇಲ್ವೆ ಅಧಿಕಾರಿಗಳು ಪರಿಶೀಲನೆ ಮಾಡಬೇಕಾಗಿದೆ ಎಂದರು.&lt;/p&gt;&lt;p&gt;ಶೃಂಗೇರಿಯಲ್ಲಿ ತಡೆ ಗೋಡೆ ಕುಸಿತದ ಬಗ್ಗೆ ಸುದ್ದಿ ಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಈ ತಡೆ ಗೋಡೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಅಲ್ಲಿಗೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.&lt;/p&gt;&lt;h3&gt;&lt;strong&gt;ಆಗುಂಬೆಯಲ್ಲಿ ಸುರಂಗ ಮಾರ್ಗ&lt;/strong&gt;&lt;/h3&gt;&lt;p&gt;ಶಿವಮೊಗ್ಗ- ಮಂಗಳೂರು ನ್ಯಾಷನಲ್ ಹೈವೇ ರಸ್ತೆ ಆಗುಂಬೆಯಲ್ಲಿ ಸುರಂಗ ಮಾರ್ಗದ ಮೂಲಕ ಹೋಗುವ ಬಗ್ಗೆ ಸರ್ವೆ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಈಗ ಆಗುಂಬೆ ಘಾಟಿ ರಸ್ತೆ 6.50 ಮೀಟರ್ ಅಗಲ ಇದೆ. ಇದನ್ನು 9.50 ಮೀ. ಅಗಲ ಮಾಡಬೇಕಾಗಿದೆ. ಇದರಿಂದ ವಾಹನ ಅಪಘಾತಗಳನ್ನು ತಪ್ಪಿಸಬಹುದು.ಆಗುಂಬೆಯಲ್ಲಿ ಸುರಂಗ ಮಾರ್ಗ ಮಾಡಿದರೆ ರೈಲು ಸಹ ಅದರಲ್ಲಿ ಹೋಗಬಹುದು. ಶಿವಮೊಗ್ಗ ಸಂಸದ ರಾಘವೇಂದ್ರ ಸಹ ಪ್ರಯತ್ನ ನಡೆಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಉಡುಪಿಯ 9 ಗ್ರಾಮ ಪಂಚಾಯ್ತಿಗಳಲ್ಲಿ ಭಾರತ್ ಪಂಪ್, ಭಾರತ್ ಕೆಫೆ, ಇವಿ ಸ್ಟೇಷನ್ ಆರಂಭ&lt;/strong&gt;&lt;/p&gt;&lt;p&gt;ಕೆಲವು ಪರಿಸವಾದಿಗಳು ಸುರಂಗ ಮಾಡಿದರೆ ಕೇರಳದ ವೈನಾಡು ರೀತಿಯಲ್ಲಿ ಗುಡ್ಡ ಕುಸಿಯಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದ ಹಲವು ಕಡೆ ಸುರಂಗ ಮಾರ್ಗವಿದೆ. ಅಲ್ಲಿ ಏನೂ ಆಗಿಲ್ಲ. ತಜ್ಞರ ಅಭಿಪ್ರಾಯ ಪಡೆದು ಪರಿಸರವಾದಿಗಳ ಸಲಹೆ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ : &lt;/strong&gt;&lt;strong&gt;ವಯನಾಡು ರೀತಿ ರಾಜ್ಯದಲ್ಲೂ ಭೂಕುಸಿತದ ಆತಂಕ! ಚಂದ್ರಗಿರಿ ಪರ್ವತದಲ್ಲಿ ಕುಸಿತಿದೆ ಗುಡ್ಡ!&lt;/strong&gt;&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-route-to-sringeri-via-shivamogga-narasimharajapur-koppa-kota-srinivasa-pujari-letter-mrq/articleshow-ucxa6an"/>
        </item>
        <item>
            <title><![CDATA[NH 169: ತನಿಕೋಡ್‌ನಿಂದ SK ಬಾರ್ಡರ್‌ವರೆಗೆ ಭಾರೀ ವಾಹನಗಳಿಗೆ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ]]></title>
            <link>https://kannada.asianetnews.com/gallery/karnataka-districts/chikkamagalur-national-highway-169-heavy-vehicles-banned-from-thanikode-to-sk-border-here-is-the-alternative-route-mrq-w246czg</link>
            <guid isPermaLink="true">https://kannada.asianetnews.com/gallery/karnataka-districts/chikkamagalur-national-highway-169-heavy-vehicles-banned-from-thanikode-to-sk-border-here-is-the-alternative-route-mrq-w246czg</guid>
            <pubDate>Thu, 09 Jul 2026 07:33:37 +0530</pubDate>
            <description><![CDATA[&lt;p&gt;ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್&zwnj;ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್&zwnj;ನಿಂದ ಎಸ್.ಕೆ. ಬಾರ್ಡರ್&zwnj;ವರೆಗೆ ನಿಷೇಧಿಸಲಾಗಿದೆ. ಪ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx29gp7d013d97nqj246yz0d,imgname-national-highway--3--1783562262765.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್&zwnj;ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್&zwnj;ನಿಂದ ಎಸ್.ಕೆ. ಬಾರ್ಡರ್&zwnj;ವರೆಗೆ ನಿಷೇಧಿಸಲಾಗಿದೆ. ಪ&lt;/p&gt;&lt;img&gt;&lt;p&gt;ರಾಷ್ಟ್ರೀಯ ಹೆದ್ದಾರಿ 169ರ ಕಿ.ಮೀದಲ್ಲಿನ ಸೇತುವೆಗಳನ್ನು ಪರಿವೀಕ್ಷಣೆ ಮಾಡಿದ್ದು, ಸದರಿ ಕಿರು ಸೇತುವೆಗಳ ಕಲ್ಲುಗಳು ಅಲ್ಲಲ್ಲಿ ಕಿತ್ತು ಬಂದಿರುವುದು, ಕಂಬಗಳು ಭಾಗಶಃ ಹಾನಿಗೊಳಗಾಗಿರೋದು ಕಂಡು ಬಂದಿದ. ಸೇತುವೆ ಸ್ಲಾಬ್ ನ ಬೀಮ್ ಗಳ ಕಾಂಕ್ರೀಟ್ ಅಲ್ಲಲ್ಲಿ ಬಿದ್ದು ಹೋಗಿದ್ದು ಸರಳುಗಳು ಹೊರಚಾಚಿರುವುದು ಮತ್ತು ಸೇತುವೆಗಳ ಕೈಪಿಡಿಗಳು ಬಿದ್ದು ಹೋಗಿರುವುದು ಕಂಡು ಬಂದಿರುತ್ತದೆ.&lt;/p&gt;&lt;img&gt;&lt;p&gt;ಈ ಹೆದ್ದಾರಿ ವಲಯದಲ್ಲಿ ಬರುವ ನಾಲ್ಕು ಕಿರು ಸೇತುವೆಗಳು ತೀರಾ ಶಿಥಿಲಾವಸ್ಥೆಯಲ್ಲಿದ್ದು, ಭಾರಿ ವಾಹನಗಳು ಸಂಚರಿಸಿದರೆ ಕುಸಿಯುವ ಅಪಾಯವಿದೆ. ನಿರಂತರ ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ (ಬದಿಗಳ) ಮಣ್ಣು ಕೊಚ್ಚಿ ಹೋಗುತ್ತಿದ್ದು, ಭಾರಿ ವಾಹನಗಳು ಚಲಿಸಿದಾಗ ರಸ್ತೆ ಕುಸಿದು ದೊಡ್ಡ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ.&lt;/p&gt;&lt;img&gt;&lt;p&gt;ಈ ಹಿನ್ನೆಲೆ ದಿನಾಂಕ 30-09-2026 ರವರೆಗೆ 12 ಟನ್ ಗಿಂತ ಅಧಿಕ ಭಾರದ ಸರಕು ಸಾಗಾಣಿಕೆಯ (ಟಿಪ್ಪರ್, ಲಾರಿ ಮತ್ತು ಕಟ್ಟಡ ನಿರ್ಮಾಣದ ಸಾಮಾಗ್ರಿಗಳು ಮತ್ತು ಇನ್ನಿತರೆ) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡ್&zwnj;ನಿಂದ ಎಸ್.ಕೆ. ಬಾರ್ಡರ್&zwnj;ವರೆಗೆ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.&lt;/p&gt;&lt;img&gt;&lt;p&gt;1. ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.&lt;/p&gt;&lt;p&gt;2. ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು- ಮಾಗುಂಡಿ-ಕಳಸ -ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.&lt;/p&gt;&lt;p&gt;3. ಕೊಪ್ಪ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ - ಬಾಳೆಹೊನ್ನೂರು- ಮಾಗುಂಡಿ-ಕಳಸ-ಕುದುರೆಮುಖ - ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.&lt;/p&gt;&lt;img&gt;&lt;p&gt;ಈ ಹೆದ್ದಾರಿಯು ತೀವ್ರ ತಿರುವುಗಳು, ಕಡಿದಾದ ಏರಿ ಹಾಗೂ ಏಕಪಥ (Single Lane) ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ಸಂಚಾರ ಅತ್ಯಂತ ಅಪಾಯಕಾರಿ. ನಿರಂತರ ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ (ಬದಿಗಳ) ಮಣ್ಣು ಕೊಚ್ಚಿ ಹೋಗುತ್ತಿದ್ದು, ಭಾರಿ ವಾಹನಗಳು ಚಲಿಸಿದಾಗ ರಸ್ತೆ ಕುಸಿದು ದೊಡ್ಡ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/chikkamagalur-national-highway-169-heavy-vehicles-banned-from-thanikode-to-sk-border-here-is-the-alternative-route-mrq-w246czg"/>
        </item>
        <item>
            <title><![CDATA[ಕರುಣೆ ಇಲ್ಲದ ಅಮ್ಮ.. ಏಳು ತಿಂಗಳ ಹಸುಗೂಸಿನ ಎದುರೇ ಪ್ರಾಣಬಿಟ್ಟಳು..!]]></title>
            <link>https://kannada.asianetnews.com/bengaluru-urban/heartless-mother-dies-in-front-of-her-7-month-old-baby-in-bengaluru-gkn/articleshow-w3olxqq</link>
            <guid isPermaLink="true">https://kannada.asianetnews.com/bengaluru-urban/heartless-mother-dies-in-front-of-her-7-month-old-baby-in-bengaluru-gkn/articleshow-w3olxqq</guid>
            <pubDate>Sun, 26 Jul 2026 12:10:42 +0530</pubDate>
            <description><![CDATA[&lt;p&gt;ಬೆಂಗಳೂರಿನಲ್ಲಿ ಪತಿಯ ಅಕ್ರಮ ಸಂಬಂಧ ಮತ್ತು ಮಾನಸಿಕ ಹಿಂಸೆಯಿಂದ ನೊಂದ 24 ವರ್ಷದ ತಾಯಿಯೊಬ್ಬಳು ತನ್ನ ಏಳು ತಿಂಗಳ ಹಸುಗೂಸನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ನೋಡುತ್ತಿದ್ದಂತೆಯೇ ವಿಡಿಯೋ ಕಾಲ್&zwnj;ನಲ್ಲೇ ಬದುಕು ಅಂತ್ಯ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kyejdhe1g801ajm6s6vaz9c4,imgname-mother-died-1785047991745.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಏಳು ತಿಂಗಳ ಹಸಿಗೂಸನ್ನು ಬಿಟ್ಟು ತಾಯಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿಯ ಅಕ್ರಮ ಸಂಬಂಧ ಹಾಗೂ ಆತ ನೀಡಿದ ಮಾನಸಿಕ ಹಿಂಸೆಗೆ ಬೇಸತ್ತು ಸಾನಿಕ ಗೌಡ (24) ಎಂಬುವವರು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.&lt;/p&gt;&lt;h2&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h2&gt;&lt;p&gt;ಸಾನಿಕ ಗೌಡಗೆ ಚಿಕ್ಕಮಗಳೂರು ಮೂಲದ ಶರಣ್ ಗೌಡ ಎಂಬುವವರ ಜೊತೆ ಒಂದು ವರ್ಷ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇತ್ತೀಚೆಗಷ್ಟೇ ಸಾನಿಕ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಬಾಣಂತನಕ್ಕಾಗಿ ರಾಯಸಂದ್ರದಲ್ಲಿರುವ ತಮ್ಮ ತವರು ಮನೆಗೆ ಬಂದಿದ್ದ ಸಾನಿಕ, ಅಲ್ಲಿಯೇ ಜೀವನ ಅಂತ್ಯಗೊಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಪತಿಯ ಕ್ರೌರ್ಯಕ್ಕೆ ಬಲಿಯಾದ ಸಾನಿಕ?&lt;/strong&gt;&lt;/h3&gt;&lt;p&gt;ಆರೋಪಿ ಪತಿ ಶರಣ್ ಗೌಡ ಬೇರೆ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ಅಮಾನವೀಯತೆಯ ಪರಮಾವಧಿ ಎಂಬಂತೆ, ಶರಣ್ ಗೌಡ ತಾನು ಪ್ರಿಯತಮೆ ಜೊತೆ ಮಾತನಾಡುತ್ತಿರುವ ವಿಡಿಯೋ ಮತ್ತು ಆಡಿಯೋ ಕ್ಲಿಪ್&zwnj;ಗಳನ್ನು ಪತ್ನಿ ಸಾನಿಕಳಿಗೆ ಕಳುಹಿಸಿ ವಿಕೃತ ಸಂತೋಷ ಪಟ್ಟಿದ್ದ ಎನ್ನಲಾಗಿದೆ. ಇದನ್ನು ಕಂಡು ತೀವ್ರ ಮನನೊಂದ ಸಾನಿಕ, ಪತಿಗೆ ವಿಡಿಯೋ ಕಾಲ್ ಮಾಡಿ ಆತ ನೋಡುತ್ತಿರುವಂತೆಯೇ ನೇಣಿಗೆ ಶರಣಾಗಿದ್ದಾರೆ.&lt;/p&gt;&lt;p&gt;ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಸಾನಿಕ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಸಣ್ಣ ಮಗು ಹಸಿವಿನಿಂದ ಅಳುತ್ತಿದ್ದರೂ ಗಮನಿಸದಷ್ಟು ನೋವಿನಲ್ಲಿದ್ದ ತಾಯಿ, ಕೊನೆಗೆ ಸಾವಿನ ಹಾದಿ ಹಿಡಿದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪರಪ್ಪನ ಅಗ್ರಹಾರ ಪೊಲೀಸರು ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಸಾನಿಕ ಅವರ ಪೋಷಕರು ಪತಿ ಶರಣ್ ಗೌಡ ವಿರುದ್ಧ ಕಿರುಕುಳ ಹಾಗೂ ಆತ್ಮ*ತ್ಯೆಗೆ ಪ್ರೇರಣೆ ನೀಡಿದ ಆರೋಪದಡಿ ದೂರು ನೀಡಿದ್ದಾರೆ. ಮಗುವಿನ ಭವಿಷ್ಯವನ್ನು ಕಿತ್ತುಕೊಂಡ ಪತಿಯ ಅಕ್ರಮ ಸಂಬಂಧದ ವಿಡಿಯೋಗಳೇ ಈಗ ಈ ಪ್ರಕರಣದ ಪ್ರಮುಖ ಸಾಕ್ಷ್ಯಗಳಾಗಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ..&lt;/p&gt;]]></content:encoded>
            <category>chikkamagalur</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/bengaluru-urban/heartless-mother-dies-in-front-of-her-7-month-old-baby-in-bengaluru-gkn/articleshow-w3olxqq"/>
        </item>
        <item>
            <title><![CDATA[ನಯನಾ ಮೋಟಮ್ಮಗೂ ಬೇಸರ.. ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕಿ..!]]></title>
            <link>https://kannada.asianetnews.com/politics/karnataka-cabinet-expansion-news-congress-mla-nayana-motamma-on-dk-shivakumar-government-gkn/articleshow-wal1m7i</link>
            <guid isPermaLink="true">https://kannada.asianetnews.com/politics/karnataka-cabinet-expansion-news-congress-mla-nayana-motamma-on-dk-shivakumar-government-gkn/articleshow-wal1m7i</guid>
            <pubDate>Tue, 04 Aug 2026 12:52:27 +0530</pubDate>
            <description><![CDATA[ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೈಕ್ಷಣಿಕ ಅರ್ಹತೆ ಹಾಗೂ ಜಿಲ್ಲಾ ಪ್ರಾತಿನಿಧ್ಯದ ಆಧಾರದ ಮೇಲೆ ತಮಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿತ್ತು, ಆದರೆ ಅವಕಾಶ ನೀಡದಿರುವುದು ತೀವ್ರ ಬೇಸರ ತಂದಿದೆ ಎಂದು ಅವರು ಹೇಳಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz5tdb321artf2fwnqz3g142,imgname-nayana-motamma-1785828125794.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ ಬುಗಿಲೆದ್ದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಟೀಂನಲ್ಲಿ ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಶಾಸಕಿ ನಯನಾ ಮೋಟಮ್ಮ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;h2&gt;&lt;strong&gt;ಮಹಿಳೆಯರ ಕಡೆಗಣನೆಗೆ ಬೇಸರ&lt;/strong&gt;&lt;/h2&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ನಯನಾ ಮೋಟಮ್ಮ, ಖಂಡಿತಾ ಮಹಿಳೆಯರಿಗೆ ಅವಕಾಶ ಕೊಡದ ವಿಚಾರ ನನಗೆ ತೀವ್ರ ಬೇಸರ ತಂದಿದೆ. ಇದು ಪಕ್ಷವು ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಮಯ ಎಂದು ಹೇಳುವ ಮೂಲಕ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವಕ್ಕೆ ನೇರವಾಗಿಯೇ ಟಾಂಗ್ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಮಹಿಳಾ ಮೀಸಲಾತಿ ಬಿಲ್ ಪ್ರಸ್ತಾಪ&lt;/strong&gt;&lt;/h2&gt;&lt;p&gt;ದೇಶದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸಾಗಿ ಜಾರಿಗೆ ಬರಬೇಕಿದೆ. ಇಂತಹ ಹಂತದಲ್ಲೇ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದಿದ್ದರೆ, ಮುಂದಿನ ದಿನಗಳಲ್ಲಿ ಪಕ್ಷ ಇದನ್ನು ಯಾವ ರೀತಿ ನಿಭಾಯಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಅವರು ಎಚ್ಚರಿಸಿದ್ದಾರೆ. ಈ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯಲ್ಲಿ ಮಹಿಳೆಯರನ್ನು ಮರೆತಿದೆ ಎಂಬ ಧಾಟಿಯಲ್ಲಿ ಮಾತನಾಡಿದ್ದಾರೆ.&lt;/p&gt;&lt;h2&gt;&lt;strong&gt;ಸಚಿವ ಸ್ಥಾನದ ಆಕಾಂಕ್ಷೆ ಬಿಚ್ಚಿಟ್ಟ ನಯನಾ&lt;/strong&gt;&lt;/h2&gt;&lt;p&gt;ಇದೇ ವೇಳೆ ತಮಗಿದ್ದ ಸಚಿವ ಸ್ಥಾನದ ಆಕಾಂಕ್ಷೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ ನಯನಾ ಮೋಟಮ್ಮ, ಮೊದಲ ಬಾರಿಗೆ ಗೆದ್ದವರಿಗೆ ಪ್ರಾತಿನಿಧ್ಯ ಕೊಡುತ್ತಾರೆ ಎಂಬ ಮಾತಿತ್ತು. ಶೈಕ್ಷಣಿಕವಾಗಿ ನಾನು ಅರ್ಹತೆ ಹೊಂದಿದ್ದೇನೆ ಮತ್ತು ಜಿಲ್ಲಾ ಪ್ರಾತಿನಿಧ್ಯದ ಅಡಿಯಲ್ಲಿ ನನಗೂ ಅವಕಾಶ ಸಿಗಬೇಕಿತ್ತು. ಚಿಕ್ಕಮಗಳೂರು ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದೇವೆ. ಇದೆಲ್ಲವನ್ನು ಗಮನಿಸಿದಾಗ ನನಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ನಾನು ಎಲ್ಲ ನಾಯಕರನ್ನೂ ಮಾತನಾಡಿಸಿದ್ದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.&lt;/p&gt;&lt;p&gt;ನಿನ್ನೆಯಷ್ಟೇ ಡಿ.ಕೆ.ಶಿವಕುಮಾರ್ ಅವರ ತಂಡಕ್ಕೆ ಹೊಸ ಸದಸ್ಯರ ಸೇರ್ಪಡೆಯಾಗಿದೆ. ಈ ತಂಡದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ. ನಯನಾ ಮೋಟಮ್ಮ ಅವರ ಈ ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದ್ದು, ಸರ್ಕಾರ ಮತ್ತು ಸಂಘಟನೆಯಲ್ಲಿ ಮಹಿಳಾ ಶಾಸಕಿಯರ ಅಸಮಾಧಾನ ಸ್ಫೋಟಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಒಟ್ಟಿನಲ್ಲಿ ಶೈಕ್ಷಣಿಕ ಅರ್ಹತೆ ಮತ್ತು ಜಿಲ್ಲೆಯ ರಾಜಕೀಯ ಪ್ರಾಬಲ್ಯದ ಆಧಾರದ ಮೇಲೆ ಮಂತ್ರಿಗಿರಿಯ ನಿರೀಕ್ಷೆಯಲ್ಲಿದ್ದ ನಯನಾ ಮೋಟಮ್ಮ ಅವರಿಗೆ ನಿರಾಸೆಯಾಗಿದ್ದು ಇದು ಮುಂಬರುವ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>chikkamagalur</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/politics/karnataka-cabinet-expansion-news-congress-mla-nayana-motamma-on-dk-shivakumar-government-gkn/articleshow-wal1m7i"/>
        </item>
        <item>
            <title><![CDATA[ಹಿಟ್ ಅಂಡ್ ರನ್‌ ಕೇಸ್‌ಗೆ ರೋಚಕ ಟ್ವಿಸ್ಟ್.. ಆಪ್ತಮಿತ್ರನ ಸದ್ದಿಲ್ಲದೇ ಮುಗಿಸಿಬಿಟ್ಟಿದ್ದ ಸ್ನೇಹಿತ..!]]></title>
            <link>https://kannada.asianetnews.com/chikkamagalur/major-twist-in-hit-and-run-case-in-chikkamagaluru-this-is-fight-between-two-friends-for-money-matter-gkn/articleshow-zgp6bfz</link>
            <guid isPermaLink="true">https://kannada.asianetnews.com/chikkamagalur/major-twist-in-hit-and-run-case-in-chikkamagaluru-this-is-fight-between-two-friends-for-money-matter-gkn/articleshow-zgp6bfz</guid>
            <pubDate>Fri, 24 Jul 2026 11:08:39 +0530</pubDate>
            <description><![CDATA[&lt;p&gt;ಒಂದೂವರೆ ತಿಂಗಳ ಹಿಂದೆ ನಡೆದ ಆ ಘಟನೆಯನ್ನು ಎಲ್ಲರೂ ಒಂದು ಭೀಕರ ರಸ್ತೆ ಅಪಘಾತ ಎಂದೇ ಭಾವಿಸಿದ್ದರು. ಅಪಘಾತ ನಡೆದ ಜಾಗದಲ್ಲಿ ಪಲ್ಟಿಯಾಗಿದ್ದ ಗೂಡ್ಸ್ ಆಟೋ ಆ ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿತ್ತು. ಪೊಲೀಸರ ಹದ್ದಿನ ಕಣ್ಣು ಈ ಅಪಘಾತದ ಹಿಂದಿದ್ದ ಕರಾಳ ಕೊಲೆಯ ರಹಸ್ಯವನ್ನು ಬಯಲಿಗೆಳೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky9a2cft54t221w160scyecn,imgname-chikkamagaluru-hit-and-run-case-1784871465466.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು: &lt;/strong&gt;ಒಂದೂವರೆ ತಿಂಗಳ ಹಿಂದೆ ನಡೆದ ಆ ಘಟನೆಯನ್ನು ಎಲ್ಲರೂ ಒಂದು ಭೀಕರ ರಸ್ತೆ ಅಪಘಾತ ಎಂದೇ ಭಾವಿಸಿದ್ದರು. ಅಪಘಾತ ನಡೆದ ಜಾಗದಲ್ಲಿ ಪಲ್ಟಿಯಾಗಿದ್ದ ಗೂಡ್ಸ್ ಆಟೋ ಆ ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿತ್ತು. ಪೊಲೀಸರ ಹದ್ದಿನ ಕಣ್ಣು ಈ ಅಪಘಾತದ ಹಿಂದಿದ್ದ ಕರಾಳ ಕೊಲೆಯ ರಹಸ್ಯವನ್ನು ಬಯಲಿಗೆಳೆದಿದೆ. ಹಣದ ಹಪಾಹಪಿಗೆ ತನ್ನ ಪ್ರಾಣ ಸ್ನೇಹಿತನನ್ನೇ ಕೊಂದು, ಏನೂ ತಿಳಿಯದವನಂತೆ ನಟಿಸುತ್ತಿದ್ದ ಖತರ್ನಾಕ್ ಕಿಲಾಡಿಯೀಗ ಪೊಲೀಸರ ಅತಿಥಿಯಾಗಿದ್ದಾನೆ.&lt;/p&gt;&lt;h2&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h2&gt;&lt;p&gt;ಹಾಸನ ನಗರದ ವಿಜಯನಗರ ನಿವಾಸಿಗಳಾಗಿದ್ದ ಯಶವಂತ್ (26) ಮತ್ತು ಸಚಿನ್ ಪರಸ್ಪರ ಸ್ನೇಹಿತರು. ಕಳೆದ ಜೂನ್ 12ರಂದು ಇಬ್ಬರೂ ಬೈಕಿನಲ್ಲಿ ಅಜ್ಜಂಪುರಕ್ಕೆ ತೆರಳಿದ್ದರು. ಅಂದು ರಾತ್ರಿ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಶವಂತ್ ಶವ ಪತ್ತೆಯಾಗಿತ್ತು. ಯಶವಂತ್ ಶವ ಬಿದ್ದಿದ್ದ ಜಾಗದಲ್ಲೇ ಗೂಡ್ಸ್ ಆಟೋವೊಂದು ಪಲ್ಟಿಯಾಗಿತ್ತು. ಇದನ್ನು ನೋಡಿದ ಸ್ಥಳೀಯರು ಹಾಗೂ ಪೊಲೀಸರು ಆಟೋ ಡಿಕ್ಕಿಯಾಗಿ ಯಶವಂತ್ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ಊಹಿಸಿದ್ದರು. ಇದನ್ನು &lsquo;ಹಿಟ್ ಅಂಡ್ ರನ್&rsquo; ಪ್ರಕರಣವೆಂದೇ ದಾಖಲಿಸಲಾಗಿತ್ತು.&lt;/p&gt;&lt;h2&gt;&lt;strong&gt;ಪೊಲೀಸರಿಗೆ ಸುಳಿವು ನೀಡಿದ ಆ &lsquo;ಒಂದು&rsquo; ಬೈಕ್!&lt;/strong&gt;&lt;/h2&gt;&lt;p&gt;ಮೇಲ್ನೋಟಕ್ಕೆ ಅಪಘಾತದಂತೆ ಕಂಡರೂ ಸಖರಾಯಪಟ್ಟಣ ಪೊಲೀಸರಿಗೆ ಒಂದು ಅನುಮಾನ ಕಾಡುತ್ತಿತ್ತು. ಅದೇನಪ್ಪಾ ಅಂದರೆ ಯಶವಂತ್ ಅಂದು ಸವಾರಿ ಮಾಡುತ್ತಿದ್ದ ಬೈಕ್ ಮಾತ್ರ ಘಟನಾ ಸ್ಥಳದಲ್ಲಿ ಎಲ್ಲೂ ಪತ್ತೆಯಾಗಿರಲಿಲ್ಲ. ಶವ ಸಿಕ್ಕರೂ ಬೈಕ್ ನಾಪತ್ತೆಯಾಗಿದ್ದೇ ತನಿಖೆಯ ದಿಕ್ಕು ಬದಲಿಸಲು ಕಾರಣವಾಯಿತು. ನಿರಂತರ ಒಂದೂವರೆ ತಿಂಗಳ ಕಾಲ ತನಿಖೆ ನಡೆಸಿದ ಪೊಲೀಸರಿಗೆ, ಗೆಳೆಯ ಸಚಿನ್&zwnj;ನ ಮೇಲೆ ಅನುಮಾನ ವ್ಯಕ್ತವಾಯಿತು.&lt;/p&gt;&lt;p&gt;ಪೊಲೀಸರು ಸಚಿನ್&zwnj;ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ಸತ್ಯ ಹೊರಬಿದ್ದಿದೆ. ಕಾರು ಮಾರಾಟ ಮಾಡಿದ ಹಣದ ವಿಚಾರವಾಗಿ ಯಶವಂತ್ ಮತ್ತು ಸಚಿನ್ ನಡುವೆ ಗಲಾಟೆ ನಡೆದಿತ್ತು. ಜೂನ್ 12ರ ರಾತ್ರಿ ಹಿರೇಗೌಜ ಬಳಿ ಹಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿದೆ. ಹಳೆಯ ದ್ವೇಷವೂ ಇದ್ದ ಕಾರಣ, ಸಚಿನ್ ತನ್ನ ಸ್ನೇಹಿತ ಯಶವಂತ್&zwnj;ನನ್ನು ಕೊಂದು ಅಲ್ಲಿಂದ ಎಸ್ಕೇಪ್ ಆಗಿದ್ದ.&lt;/p&gt;&lt;p&gt;ಸಚಿನ್ ಕೊಲೆ ಮಾಡಿ ಪರಾರಿಯಾದ ಅದೇ ಜಾಗದಲ್ಲೇ ಗೂಡ್ಸ್ ಆಟೋವೊಂದು ಪಲ್ಟಿಯಾಗಿ ಬಿದ್ದಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಸಚಿನ್, ತನ್ನ ಗೆಳೆಯ ಆಟೋ ಡಿಕ್ಕಿಯಾಗಿ ಸತ್ತಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದ. ತಾನು ಕೊಲೆ ಮಾಡಿ ಒಂದೂವರೆ ತಿಂಗಳ ಕಾಲ ಯಾವುದೂ ಗೊತ್ತಿಲ್ಲದವನಂತೆ ನಾಟಕವಾಡುತ್ತಿದ್ದ. ಆದರೆ ಸಖರಾಯಪಟ್ಟಣ ಪೊಲೀಸರ ಚಾಣಾಕ್ಷತನದಿಂದ ಸಚಿನ್ ಈಗ ಜೈಲು ಪಾಲಾಗಿದ್ದಾನೆ.&lt;/p&gt;]]></content:encoded>
            <category>chikkamagalur</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/chikkamagalur/major-twist-in-hit-and-run-case-in-chikkamagaluru-this-is-fight-between-two-friends-for-money-matter-gkn/articleshow-zgp6bfz"/>
        </item>
    </channel>
</rss>
