<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 19:27:08 +0530</lastBuildDate>
        <atom:link href="https://kannada.asianetnews.com/rss/chikkamagalur" rel="self" type="application/rss+xml"/>
        <item>
            <title><![CDATA[Chikkamagaluru : ದಕ್ಷಿಣ ಭಾರತದಲ್ಲೇ ಪ್ರಥಮ: ಆಪರೇಷನ್ ಒಂಟಿ ಕಾಡುಕೋಣ ಸೆರೆ ಸಕ್ಸಸ್]]></title>
            <link>https://kannada.asianetnews.com/gallery/karnataka-districts/chikkamagaluru-first-in-south-india-operation-onti-kadukona-success-mrq-0bpp8ge</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-first-in-south-india-operation-onti-kadukona-success-mrq-0bpp8ge</guid>
            <pubDate>Mon, 18 May 2026 05:45:55 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ತಾಲೂಕಿನ ಅರೆನೂರು ಹಕ್ಕಿಮಕ್ಕಿಯಲ್ಲಿ ರೈತರ ಜಮೀನುಗಳಿಗೆ ಹಾನಿ ಮಾಡುತ್ತಿದ್ದ ಒಂಟಿ ಕಾಡುಕೋಣವನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. &amp;nbsp;ಕಾರ್ಯಾಚರಣೆಯ ಬಳಿಕ, ಕಾಡುಕೋಣವನ್ನು ಶಿವಮೊಗ್ಗದ ಮೃಗಾಲಯಕ್ಕೆ ಸ್ಥಳಾಂತರಿಸಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krw6n2vkbyeeh9etntksnb8n,imgname-kadukona--2--1779062967155.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರು ತಾಲೂಕಿನ ಅರೆನೂರು ಹಕ್ಕಿಮಕ್ಕಿಯಲ್ಲಿ ರೈತರ ಜಮೀನುಗಳಿಗೆ ಹಾನಿ ಮಾಡುತ್ತಿದ್ದ ಒಂಟಿ ಕಾಡುಕೋಣವನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. &amp;nbsp;ಕಾರ್ಯಾಚರಣೆಯ ಬಳಿಕ, ಕಾಡುಕೋಣವನ್ನು ಶಿವಮೊಗ್ಗದ ಮೃಗಾಲಯಕ್ಕೆ ಸ್ಥಳಾಂತರಿಸಲಾಗುತ್ತಿದೆ.&lt;/p&gt;&lt;img&gt;&lt;p&gt;ಒಂಟಿ ಕಾಡುಕೋಣವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಈ ಕಾಡು ಕೋಣ ಚಿಕ್ಕಮಗಳೂರು ತಾಲೂಕಿನ ಅರೆನೂರು ಹಕ್ಕಿಮಕ್ಕಿಯಲ್ಲಿ ಜಮೀನುಗಳಿಗೆ ಹಾನಿ ಮಾಡಿತ್ತು.&lt;/p&gt;&lt;img&gt;&lt;p&gt;ಕಾರ್ಯಾಚರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ, ದಕ್ಷಿಣ ಭಾರತದಲ್ಲೇ ಪ್ರಥಮ ಬಾರಿಗೆ ಆಲ್ದೂರು ವಿಭಾಗದಲ್ಲಿ ಕಾಡುಕೋಣವೊಂದನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕಾರ್ಯಾಚರಣೆ ಆರಂಭಿಸಿ ಶುಕ್ರವಾರ ಒಂದು ಕಾಡುಕೋಣಕ್ಕೆ ಡಾರ್ಟ್ ಸಹ ಮಾಡಲಾಗಿತ್ತು. ಆದರೆ, ಡಾರ್ಟ್ ಮಾಡಲಾದ ಪ್ರದೇಶ ಬಹಳ ಆಳವಾಗಿತ್ತು. ಅದರ ಜೀವಕ್ಕೆ ಹಾನಿಯಾಗುವ ಸಾಧ್ಯತೆಯಿತ್ತು. ಈ ಹಿನ್ನೆಲೆಯಲ್ಲಿ ಕೋಣ ಹಿಡಿಯದೆ ವಾಪಸ್ ಅರಣ್ಯಕ್ಕೆ ಬಿಡಲಾಯಿತು.&lt;/p&gt;&lt;img&gt;&lt;p&gt;ಶನಿವಾರ ಕೊಪ್ಪ ವಿಭಾಗದಿಂದ ಆಲ್ದೂರು ಭಾಗಕ್ಕೆ ಕಾರ್ಯಾಚರಣೆ ಸ್ಥಳಾಂತರಿಸಿ ಕಾಡುಕೋಣವನ್ನು ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲೂ ಸಹ ರೈತರ ಜಮೀನುಗಳಿಗೆ ನುಗ್ಗಿ ಹಾನಿ ಮಾಡುವ ಕಾಡುಕೋಣಗಳನ್ನು ಹಂತ ಹಂತವಾಗಿ ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಕಾಡುಕೋಣಗಳ ಸೆರೆ ಬಗ್ಗೆ ಈ ಹಿಂದೆಯೇ ಹಲವು ಸಭೆಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೆ. ಈ ಬಗ್ಗೆ ಆದೇಶವೂ ಆಗಿತ್ತು ಎಂದರು.&lt;/p&gt;&lt;img&gt;&lt;p&gt;ಈ ಕಾಡುಕೋಣವನ್ನು ಶಿವಮೊಗ್ಗದ ಮೃಗಾಲಯಕ್ಕೆ ಸ್ಥಳಾಂತರಿಸಿ ವೈದ್ಯಕೀಯ ಪರೀಕ್ಷೆ ಮಾಡಬೇಕಿದೆ. ತಂಡಕ್ಕೆ ವಿಶ್ರಾಂತಿ ಬೇಕಿರುವ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪುನಃ ಆರಂಭಿಸಲಾಗುವುದು ಎಂದರು.&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/chikkamagaluru-first-in-south-india-operation-onti-kadukona-success-mrq-0bpp8ge"/>
        </item>
        <item>
            <title><![CDATA[ಆಳಂದ ಕೇಸ್ ವಾಪಾಸ್, ಹಿಜಾಬ್ ಎಲ್ಲವೂ ಮುಸ್ಲಿಂ ಓಲೈಕೆಗೆ: ಪ್ರಮೋದ್‌ ಮುತಾಲಿಕ್‌ ಆಕ್ರೋಶ]]></title>
            <link>https://kannada.asianetnews.com/karnataka-districts/pramod-muthalik-hijab-issue-congress-government-criticism-gvd/articleshow-1r5puqr</link>
            <guid isPermaLink="true">https://kannada.asianetnews.com/karnataka-districts/pramod-muthalik-hijab-issue-congress-government-criticism-gvd/articleshow-1r5puqr</guid>
            <pubDate>Sat, 23 May 2026 22:57:06 +0530</pubDate>
            <description><![CDATA[&lt;p&gt;ಮುಸ್ಲಿಂ ಅಭಿವೃದ್ಧಿಗೆ ₹600 ಕೋಟಿ ಅನುದಾನ ನೀಡುವುದು ಅಲ್ಪಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ತಂತ್ರ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್&zwnj; ಮುತಾಲಿಕ್&zwnj; ಆಕ್ರೋಶ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j64gr25wnsxgapr2ehp85sa3,imgname-1--8-.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.23): &lt;/strong&gt;ಆಳಂದದ ಕೇಸ್&zwnj; ವಾಪಾಸ್&zwnj; ಪಡೆಯುವುದು, ಶಾಲಾ ಕಾಲೇಜುಗಳಲ್ಲಿ ಹಿಜಾಬ್&zwnj;ಗೆ ಅವಕಾಶ ನೀಡಿರುವುದು ಮತ್ತು ಮುಸ್ಲಿಂ ಅಭಿವೃದ್ಧಿಗೆ ₹600 ಕೋಟಿ ಅನುದಾನ ನೀಡುವುದು ಅಲ್ಪಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ತಂತ್ರ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್&zwnj; ಮುತಾಲಿಕ್&zwnj; ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಉಪ ಚುನಾವಣೆ ಬಳಿಕ ಮುಸ್ಲಿಂ ಮುಖಂಡರು ಕಾಂಗ್ರೆಸ್&zwnj; ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ತಣ್ಣಗಾಗಿಸುವ ಸಲುವಾಗಿ ರಾಜ್ಯ ಸರ್ಕಾರ ಮುಸ್ಲಿಂ ಓಲೈಕೆ ಮಾಡುತ್ತಿದೆ ಎಂದರು. ಶ್ರೀರಾಮ ಸೇನೆ ಸಂಘಟನೆಯಿಂದ ಕಲಬುರಗಿ ಆಳಂದ ಕೇಸ್ ವಾಪಾಸ್ ಪಡೆದಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲ ಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಸರ್ಕಾರ ತೀರ್ಮಾನ ರದ್ದುಪಡಿಸುವಂತೆ ಕೋರುತ್ತೇವೆ ಎಂದು ತಿಳಿಸಿದರು.&lt;/p&gt;&lt;p&gt;ರಾಘವ ಚೈತ್ಯನ್ಯ ಪ್ರತಿಷ್ಠಾಪನೆ ಮಾಡಿದ್ದ ಈಶ್ವರ ಲಿಂಗವಿದ್ದು, ಅದನ್ನು ಮುಸ್ಲಿಮರು ಅತಿಕ್ರಮಣ ಮಾಡಿ ದರ್ಗಾ ಮಾಡಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಲಿಂಗದ ಮೇಲೆ ಮುಸ್ಲಿಮರು ಮಲಮೂತ್ರ ಮಾಡಿದ್ದರು. ಆಗ ಹಿಂದೂಗಳು ಪ್ರತಿಭಟನೆ ನಡೆಸಿದ್ದರು. ಆ ಸಮಯದಲ್ಲಿ ಸಂಘರ್ಷ ಉಂಟಾಯಿತು. ಮುಸ್ಲಿಂ ಗೂಂಡಾಗಳು ಪೊಲೀಸರ ಮೇಲೆ ದಾಳಿ ಮಾಡಿದ್ದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್&zwnj; ವರಿಷ್ಠಾಧಿಕಾರಿಯನ್ನು ಅಲ್ಲಿಂದ ಓಡಿಸಿದ್ದರು.&lt;/p&gt;&lt;p&gt;ಆಗ ಮುಸ್ಲಿಂ ಗೂಂಡಾಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದೀಗ ರಾಜ್ಯ ಸರ್ಕಾರ ಆ ಕೇಸ್&zwnj; ವಾಪಾಸ್ ಪಡೆಯುವ ತೀರ್ಮಾನ ಮಾಡಿದೆ. ಈ ಮೂಲಕ ಪೊಲೀಸರ ಮನೋಬಲ ಕುಗ್ಗಿಸುವ ಕೆಲಸ ಸರ್ಕಾರ ಮಾಡಿದೆ. ಹೀಗಾಗಿ, ನ್ಯಾಯಾಲಯದ ಮೋರೆ ಹೋಗುತ್ತೇವೆ. ಸರ್ಕಾರದ ಕ್ರಮ ರದ್ದು ಪಡಿಸುವಂತೆ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಕೇಸರಿ ಶಾಲು ಹಂಚುತ್ತೇವೆ&lt;/strong&gt;&lt;/h2&gt;&lt;p&gt;ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹಿಜಾಬ್&zwnj; ಧರಿಸಲು ಅವಕಾಶ ನೀಡಿರುವ ವಿರುದ್ಧ ಜೂನ್&zwnj; 1 ರಂದು ಶಾಲಾ ಕಾಲೇಜು ಆರಂಭ ಆಗುವ ದಿನ ಕೇಸರಿ ಶಾಲು ಹಂಚಿಕೆ ಮಾಡುತ್ತೇವೆ ಎಂದು ಶ್ರೀರಾಸೇನೆ ಸಂಸ್ಥಾಪಕ ಪ್ರಮೋದ್&zwnj; ಮುತಾಲಿಕ್&zwnj; ಹೇಳಿದ್ದಾರೆ. ಹೈಕೋರ್ಟ್&zwnj; ಹಿಜಾಬ್&zwnj; ಧಾರ್ಮಿಕ ಭಾಗ ಅಲ್ಲ. ಕುರಾನ್&zwnj;ನಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಜತೆಗೆ, ಹಿಜಾಬ್&zwnj; ಅನ್ನು ಎಲ್ಲಿ ಬೇಕಾದರೂ ಧರಿಸಬಹುದು. ಆದರೆ, ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್&zwnj; ತೆಗೆದು ಅಲ್ಲಿಯ ನಿಯಮ ಪ್ರಕಾರ ಸಮವಸ್ತ್ರ ಧರಿಸಬೇಕು ಎಂದು ಹೇಳಿತ್ತು.&lt;/p&gt;&lt;p&gt;ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್&zwnj; ಮೊರೆ ಹೋಗಿದ್ದಾರೆ. ಆದರೆ, ಈ ವರೆಗೆ ಯಾವುದೇ ಆದೇಶ ನೀಡಿಲ್ಲ. ಈ ನಡುವೆ ರಾಜ್ಯ ಕಾಂಗ್ರೆಸ್&zwnj; ಸರ್ಕಾರ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹಾಶಯ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡುವ ತೀರ್ಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಸಮವಸ್ತ್ರದಲ್ಲಿ ಬೇಧ-ಭಾವ, ಮೇಲು-ಕೀಳು, ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್&zwnj;, ಉಚ್ಛ-ನೀಚ ಯಾವುದೂ ಇಲ್ಲ, ಸಮವಸ್ತ್ರ ಪದದ ಅರ್ಥ ಮಧು ಬಂಗಾರಪ್ಪಗೆ ಅರ್ಥವಾಗಿಲ್ಲವೇ, ಹಿಜಾಬ್ ಅವಕಾಶ ನೀಡುವ ಮೂಲಕ ಸಮಾಜದಲ್ಲಿ ವಿಷ ಬೀಜ ಬಿತ್ತ ಲಾಗುತ್ತಿದೆ. ಶಿವದಾರ-ಜನಿವಾರ-ರುದ್ರಾಕ್ಷಿ ಹಾಕಬಹುದು ಎಂದು ಹೇಳುತ್ತಿರಾ, ಅದನ್ನು ಹೇಳುವುದಕ್ಕೆ ನೀವು ಯಾರು ಎಂದು ಮುತಾಲಿಕ್&zwnj; ಪ್ರಶ್ನಿಸಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/pramod-muthalik-hijab-issue-congress-government-criticism-gvd/articleshow-1r5puqr"/>
        </item>
        <item>
            <title><![CDATA[ಕಾಕ್ರೋಚ್ ಜನತಾ ಪಾರ್ಟಿಗೆ 'ಲಕ್ಷ್ಮಣರೇಖೆ' ಎಳೆದ ಜಗದೀಶ್ಚಂದ್ರ; ಚಿಕ್ಕಮಗಳೂರಲ್ಲಿ 'ಹಿಟ್ ಜನತಾ ಪಾರ್ಟಿ' ಸ್ಥಾಪನೆ!]]></title>
            <link>https://kannada.asianetnews.com/gallery/karnataka-districts/chikkamagaluru-hit-janata-party-trends-against-cockroach-janata-party-of-india-on-social-media-sat-34fvgs0</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-hit-janata-party-trends-against-cockroach-janata-party-of-india-on-social-media-sat-34fvgs0</guid>
            <pubDate>Fri, 22 May 2026 18:23:18 +0530</pubDate>
            <description><![CDATA[&lt;p&gt;ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 'ಕಾಕ್ರೋಚ್ ಪಾರ್ಟಿ ಆಫ್ ಇಂಡಿಯಾ'ಗೆ ಪ್ರತಿಯಾಗಿ ಚಿಕ್ಕಮಗಳೂರಿನಲ್ಲಿ 'ಲಕ್ಷ್ಮಣರೇಖೆ ಹಾಗೂ ಹಿಟ್ ಪಾರ್ಟಿ' ಹುಟ್ಟಿಕೊಂಡಿದೆ. ಜಗದೀಶ್ಚಂದ್ರ ಎಂಬುವವರು ಸ್ಥಾಪಿಸಿದ ಈ ಪಾರ್ಟಿ, ಜಿರಲೆಗಳ ಹಾವಳಿಯನ್ನು ನಿಯಂತ್ರಿಸುವ ಘೋಷಣೆ ಮಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks7v9548ww7re96ps1y7dy0f,imgname-chikkamagaluru-hit-janata-party-1779453695112.jpg" type="image/jpeg" height="390" width="690"/>
            <content:encoded><![CDATA[&lt;p&gt;ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 'ಕಾಕ್ರೋಚ್ ಪಾರ್ಟಿ ಆಫ್ ಇಂಡಿಯಾ'ಗೆ ಪ್ರತಿಯಾಗಿ ಚಿಕ್ಕಮಗಳೂರಿನಲ್ಲಿ 'ಲಕ್ಷ್ಮಣರೇಖೆ ಹಾಗೂ ಹಿಟ್ ಪಾರ್ಟಿ' ಹುಟ್ಟಿಕೊಂಡಿದೆ. ಜಗದೀಶ್ಚಂದ್ರ ಎಂಬುವವರು ಸ್ಥಾಪಿಸಿದ ಈ ಪಾರ್ಟಿ, ಜಿರಲೆಗಳ ಹಾವಳಿಯನ್ನು ನಿಯಂತ್ರಿಸುವ ಘೋಷಣೆ ಮಾಡಿದ್ದಾರೆ.&lt;/p&gt;&lt;img&gt;&lt;p&gt;ಸಾಮಾಜಿಕ ಜಾಲತಾಣಗಳಲ್ಲಿ ಯಾವುದಕ್ಕೆ ಯಾವಾಗ ಡಿಮ್ಯಾಂಡ್ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ 'ಕಾಕ್ರೋಚ್ ಪಾರ್ಟಿ ಆಫ್ ಇಂಡಿಯಾ' (Cockroach Party of India) ಎಂಬ ವಿಚಿತ್ರ ಹೆಸರಿನ ಟ್ರೆಂಡ್ ಸದ್ದು ಮಾಡುತ್ತಿದೆ. ಆದರೆ, ಈ ಜಿರಲೆಗಳ ಹಾವಳಿಗೆ ಬ್ರೇಕ್ ಹಾಕಲು ಈಗ ಕಾಫಿನಾಡಿನ ಮಲೆನಾಡಿಗರು ಸಜ್ಜಾಗಿದ್ದಾರೆ.&lt;/p&gt;&lt;img&gt;&lt;p&gt;ನಮ್ಮ ದೇಶದಲ್ಲಿ ಈಗಾಗಲೇ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.ಕೇವಲ 5 ದಿನದಲ್ಲಿ 20 ಮಿಲಿಯನ್ ಗಿಂತ ಅಧಿಕ ಜನರು ಇನ್&zwnj;ಸ್ಟಾಗ್ರಾಂ ಫಾಲೋವರ್ಸ್&zwnj;ಗಳು ಆಗಿದ್ದಾರೆ. ಈ ಜಿರಲೆ ಪಾರ್ಟಿಗೆ ಕೌಂಟರ್ ಕೊಡಲು ಚಿಕ್ಕಮಗಳೂರಿನಲ್ಲಿ 'ಲಕ್ಷ್ಮಣರೇಖೆ ಹಾಗೂ ಹಿಟ್ ಪಾರ್ಟಿ' (Lakshmana Rekhe &amp;amp; HIT Party) ಉದಯಿಸಿದೆ!&lt;/p&gt;&lt;img&gt;&lt;p&gt;ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಜಗದೀಶ್ಚಂದ್ರ ಎಂಬುವವರು ಈ ವಿಭಿನ್ನ 'ಹಿಟ್ ಪಾರ್ಟಿ'ಗೆ ಜನ್ಮ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜಗದೀಶ್ಚಂದ್ರ ಅವರೇ ಆಯ್ಕೆಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಿರಲೆ ಪಾರ್ಟಿಯ ಆರ್ಭಟ ಹೆಚ್ಚಾದ ಬೆನ್ನಲ್ಲೇ, ಅದನ್ನು ನಿಯಂತ್ರಿಸಲು ಜಿರಲೆ ನಾಶಕ 'ಹಿಟ್' ಮತ್ತು 'ಲಕ್ಷ್ಮಣರೇಖೆ' ಹೆಸರಿನಲ್ಲಿ ಈ ಹೊಸ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ.&lt;/p&gt;&lt;img&gt;&lt;p&gt;ಈ ಹಿಟ್ ಪಾರ್ಟಿ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನ ಈ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. 'ನಾವು ಜಿರಲೆಗಳಿಗೆ ಹೆದರುವುದಿಲ್ಲ, ಅವುಗಳನ್ನು ಮಟ್ಟಹಾಕಲು ನಮ್ಮ ಬಳಿ ಅಸ್ತ್ರಗಳಿವೆ' ಎಂಬ ಸ್ಲೋಗನ್&zwnj;ಗಳು ವೈರಲ್ ಆಗುತ್ತಿವೆ.&lt;/p&gt;&lt;img&gt;&lt;p&gt;ಜಿರಲೆಗಳು ಎಲ್ಲಿಯೇ ಕಾಣಿಸಿಕೊಂಡರೂ ಹಿಟ್ ಸ್ಪ್ರೇ ಅಥವಾ ಲಕ್ಷ್ಮಣರೇಖೆ ಬಳಸಿ ಅವುಗಳನ್ನು ಶಮನ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹಿಟ್ ಪಾರ್ಟಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-hit-janata-party-trends-against-cockroach-janata-party-of-india-on-social-media-sat-34fvgs0"/>
        </item>
        <item>
            <title><![CDATA[ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ: ಖಾಸಗಿ ಜೀಪಿನಲ್ಲಿ ಅಕ್ರಮ ಪ್ರವೇಶ, ಕಾಡಾನೆಗಳನ್ನು ಕೆಣಕಿದ ಯುವಕರು!]]></title>
            <link>https://kannada.asianetnews.com/gallery/karnataka-districts/chikkamagaluru-wildlife-bhadra-tiger-reserve-illegal-jeep-safari-harassing-elephants-viral-video-sat-3v0h043</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-wildlife-bhadra-tiger-reserve-illegal-jeep-safari-harassing-elephants-viral-video-sat-3v0h043</guid>
            <pubDate>Tue, 02 Jun 2026 19:49:14 +0530</pubDate>
            <description><![CDATA[ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಯುವಕರ ತಂಡವೊಂದು ಖಾಸಗಿ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳಿಗೆ ಕಿರುಕುಳ ನೀಡಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kt4at76c479q1e3c6g7nptg4,imgname-screenshot-2026-06-02-185652-1780409507019.png" type="image/jpeg" height="390" width="690"/>
            <content:encoded><![CDATA[ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಯುವಕರ ತಂಡವೊಂದು ಖಾಸಗಿ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳಿಗೆ ಕಿರುಕುಳ ನೀಡಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.&lt;img&gt;&lt;p&gt;ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಖಾಸಗಿ ಓಪನ್ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳನ್ನು ಕಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ವನ್ಯಜೀವಿ ಸಂರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಅರಣ್ಯದಲ್ಲಿ ತೆರೆದ ಜೀಪಿನಲ್ಲಿ ಸಂಚಾರ :&lt;/strong&gt;&lt;/p&gt;&lt;p&gt;ವೈರಲ್ ಆಗಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ತೆರೆದ ಜೀಪಿನಲ್ಲಿ ಅರಣ್ಯದೊಳಗೆ ತೆರಳಿ ಸಫಾರಿ ಮಾದರಿಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಕಾಡಿನಲ್ಲಿ ಸ್ವಚ್ಛಂದವಾಗಿ ಓಡಾಡುತ್ತಿದ್ದ ಕಾಡಾನೆಗಳ ಸಮೀಪಕ್ಕೆ ಜೀಪ್ ತೆಗೆದುಕೊಂಡು ಹೋಗಿ, ಕೂಗಾಟ-ಕಿರುಚಾಟ ನಡೆಸಿರುವ ದೃಶ್ಯಗಳು ದಾಖಲಾಗಿವೆ. ಯುವಕರ ವರ್ತನೆಯಿಂದ ಉದ್ರಿಕ್ತಗೊಂಡ ಕಾಡಾನೆಯೊಂದು ಜೀಪಿನತ್ತ ವೇಗವಾಗಿ ಅಟ್ಟಿಸಿಕೊಂಡು ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;img&gt;&lt;p&gt;ಸ್ಥಳೀಯರ ಮಾಹಿತಿ ಪ್ರಕಾರ, ಘಟನೆ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯಲ್ಲಿ ನಡೆದಿರಬಹುದೆಂದು ಹೇಳಲಾಗುತ್ತಿದೆ. ಅಲ್ಲದೆ, ಈ ಪ್ರದೇಶವು ಹುಲಿ ಸಂರಕ್ಷಿತ ಅರಣ್ಯದ ಸೂಕ್ಷ್ಮ ವಲಯಕ್ಕೆ ಸಮೀಪದಲ್ಲಿರುವ ಕಾರಣ, ಖಾಸಗಿ ವಾಹನಗಳಿಗೆ ಪ್ರವೇಶ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ಉದ್ಭವಿಸಿದೆ. ಸಾಮಾನ್ಯವಾಗಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯ ಅನುಮೋದಿತ ವಾಹನಗಳು ಮತ್ತು ನಿಗದಿತ ಮಾರ್ಗಗಳಲ್ಲಿ ಮಾತ್ರ ಸಫಾರಿಗೆ ಅವಕಾಶ ಇರುತ್ತದೆ. ಆದರೆ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಖಾಸಗಿ ಓಪನ್ ಜೀಪ್ ಆಗಿರುವುದರಿಂದ ಹಲವು ಅನುಮಾನಗಳು ವ್ಯಕ್ತವಾಗಿವೆ.&lt;/p&gt;&lt;img&gt;&lt;p&gt;&lt;strong&gt;ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆ ?&lt;/strong&gt;&lt;/p&gt;&lt;p&gt;ವನ್ಯಜೀವಿಗಳ ಸಮೀಪ ತೆರಳಿ ಅವುಗಳನ್ನು ಕೆಣಕುವುದು, ಜೋರಾಗಿ ಶಬ್ದ ಮಾಡುವುದು, ಅವುಗಳ ಚಲನವಲನಕ್ಕೆ ಅಡ್ಡಿಪಡಿಸುವುದು ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆಯಾಗಬಹುದು ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ಕಾಡಾನೆಗಳಂತಹ ಸೂಕ್ಷ್ಮ ಹಾಗೂ ಶಕ್ತಿಶಾಲಿ ಪ್ರಾಣಿಗಳನ್ನು ಪ್ರಚೋದಿಸುವುದು ಮಾನವ ಜೀವಕ್ಕೂ ಅಪಾಯಕಾರಿಯಾಗಿದೆ.&lt;/p&gt;&lt;p&gt;ತಜ್ಞರ ಪ್ರಕಾರ, ಕಾಡಿನಲ್ಲಿ ಸಂಚರಿಸುವಾಗ ಪ್ರಾಣಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ. ಆದರೆ ವೈರಲ್ ವಿಡಿಯೋದಲ್ಲಿ ಯುವಕರು ಆನೆಗಳ ಅತಿ ಸಮೀಪಕ್ಕೆ ತೆರಳಿರುವುದು ಕಂಡುಬಂದಿದ್ದು, ಇದು ಅರಣ್ಯ ಪ್ರದೇಶಗಳಲ್ಲಿ ಪಾಲಿಸಬೇಕಾದ ಮೂಲಭೂತ ಸುರಕ್ಷತಾ ನಿಯಮಗಳನ್ನೇ ಉಲ್ಲಂಘಿಸಿದಂತಾಗಿದೆ.&lt;/p&gt;&lt;img&gt;&lt;p&gt;ಅರಣ್ಯ ಇಲಾಖೆ ವಿರುದ್ಧ ನಿರ್ಲಕ್ಷ್ಯದ ಆರೋಪ&lt;/p&gt;&lt;p&gt;ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ. ಸಂರಕ್ಷಿತ ಅರಣ್ಯ ಪ್ರದೇಶದೊಳಗೆ ಖಾಸಗಿ ವಾಹನ ಪ್ರವೇಶಿಸಿದ್ದರೆ ಅದನ್ನು ತಡೆಯುವಲ್ಲಿ ಇಲಾಖೆ ವಿಫಲವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಮತ್ತೊಂದೆಡೆ, ಸಂಬಂಧಿತ ವಾಹನ ಮತ್ತು ಯುವಕರ ಚಟುವಟಿಕೆಗಳ ಬಗ್ಗೆ ಇಲಾಖೆಗೆ ಮಾಹಿತಿ ಇತ್ತೇ ಅಥವಾ ಇಲ್ಲವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.ಪರಿಸರವಾದಿಗಳು, ವನ್ಯಜೀವಿ ಹೋರಾಟಗಾರರು ಹಾಗೂ ಸ್ಥಳೀಯ ಸಂಘಟನೆಗಳು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿವೆ. ಜೀಪ್ ಅನ್ನು ವಶಕ್ಕೆ ಪಡೆದು, ಸಂಬಂಧಿತ ಯುವಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.&lt;/p&gt;&lt;img&gt;&lt;p&gt;&lt;strong&gt;ರಾಜಕೀಯ ಪ್ರಭಾವ ಬಳಕೆಯ ಅನುಮಾನ&lt;/strong&gt;&lt;/p&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ಗಂಭೀರ ಪ್ರಶ್ನೆಯೂ ಉದ್ಭವಿಸಿದೆ. ಅರಣ್ಯದ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶ ಪಡೆಯಲು ಕೆಲವರು ರಾಜಕೀಯ ಅಥವಾ ಇತರೆ ಪ್ರಭಾವ ಬಳಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ನಿಜಾಂಶ ಹೊರಬರಲು ತನಿಖೆಯ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕಾಡಾನೆಗಳು ಸಾಮಾನ್ಯವಾಗಿ ತಮ್ಮ ವ್ಯಾಪ್ತಿಯಲ್ಲಿ ಅಪಾಯ ಕಂಡುಬಂದರೆ ಅಥವಾ ಪ್ರಚೋದನೆಗೆ ಒಳಗಾದರೆ ದಾಳಿ ನಡೆಸುವ ಸಾಧ್ಯತೆ ಇರುತ್ತದೆ.&amp;nbsp;&lt;/p&gt;&lt;p&gt;ಈ ಘಟನೆಯಲ್ಲಿ ಕಾಡಾನೆಯೊಂದು ಜೀಪಿನತ್ತ ಅಟ್ಟಿಸಿಕೊಂಡು ಬಂದಿರುವುದು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದಾಗಿತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಇಂತಹ ಘಟನೆಗಳು ಕೇವಲ ಮಾನವರ ಜೀವಕ್ಕೆ ಮಾತ್ರವಲ್ಲ, ವನ್ಯಜೀವಿಗಳಿಗೂ ತೊಂದರೆ ಉಂಟುಮಾಡುತ್ತವೆ. ನಿರಂತರ ಕಾಟ, ಶಬ್ದ ಮತ್ತು ಕಿರುಕುಳದಿಂದ ಪ್ರಾಣಿಗಳ ಸಹಜ ವರ್ತನೆ ಬದಲಾಗುವ ಸಾಧ್ಯತೆ ಇದ್ದು, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುವ ಅಪಾಯವೂ ಇದೆ.&lt;/p&gt;&lt;p&gt;ಈ ಘಟನೆಯ ಬಳಿಕ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಭದ್ರತಾ ವ್ಯವಸ್ಥೆ, ಗಸ್ತು ಕಾರ್ಯಾಚರಣೆ, ಪ್ರವೇಶ ನಿಯಂತ್ರಣ ಹಾಗೂ ನಿಗಾವ್ಯವಸ್ಥೆ ಕುರಿತು ಮತ್ತೆ ಪ್ರಶ್ನೆಗಳು ಕೇಳಿಬರುತ್ತಿವೆ.&lt;/p&gt;&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-wildlife-bhadra-tiger-reserve-illegal-jeep-safari-harassing-elephants-viral-video-sat-3v0h043"/>
        </item>
        <item>
            <title><![CDATA[ಹೆಣ್ಣುಮಗು ಎಂಬ ಕಾರಣಕ್ಕೆ ಮುಳ್ಳಿನ ಪೊದೆಯಲ್ಲಿ ಬೀಸಾಡಿ ಹೋದ ತಾಯಿ; ನವಜಾತ ಶಿಶು ಅನಾಥ!]]></title>
            <link>https://kannada.asianetnews.com/karnataka-districts/chikkamagaluru-nr-pura-newborn-baby-girl-abandoned-in-bushes-rescued-sat/articleshow-9op7x8f</link>
            <guid isPermaLink="true">https://kannada.asianetnews.com/karnataka-districts/chikkamagaluru-nr-pura-newborn-baby-girl-abandoned-in-bushes-rescued-sat/articleshow-9op7x8f</guid>
            <pubDate>Wed, 20 May 2026 15:26:25 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ, ಒಂದು ದಿನದ ನವಜಾತ ಹೆಣ್ಣು ಶಿಶುವನ್ನು ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ನಡೆದಿದೆ. ಸ್ಥಳೀಯರು ಮತ್ತು ಅಧಿಕಾರಿಗಳ ಸಮಯೋಚಿತ ಸ್ಪಂದನೆಯಿಂದ ಮಗುವನ್ನು ರಕ್ಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks2d0hqs3scgchcaaabjk7vt,imgname-baby-girl-1779270960887.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ 20): &lt;/strong&gt;ಹೆಣ್ಣು ಮಗು ಎಂಬ ಕಾರಣಕ್ಕೋ ಅಥವಾ ಸಮಾಜಕ್ಕೆ ಹೆದರಿಯೋ ಗೊತ್ತಿಲ್ಲ, ಹೆತ್ತ ತಾಯಿಯೇ ತನ್ನ ಮಗುವನ್ನು ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೇವಲ ಒಂದು ದಿನದ ಹಸುಗೂಸನ್ನು ಟವೆಲ್&zwnj;ನಲ್ಲಿ ಸುತ್ತಿ ಪೊದೆಯಲ್ಲಿ ಎಸೆದು ಹೋಗಿರುವ ಈ ಘಟನೆ ಮನುಕುಲವೇ ತಲೆತಗ್ಗಿಸುವಂತೆ ಮಾಡಿದೆ.&lt;/p&gt;&lt;p&gt;ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ಗ್ರಾಮದ ನೀರುಗಂಟಿಯೊಬ್ಬರು ಎಂದಿನಂತೆ ಗದ್ದೆಗಳಿಗೆ ನೀರು ಬಿಡಲು ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿಯ ಪೊದೆಯೊಂದರಲ್ಲಿ ಮಗು ಅಳುವ ಶಬ್ದ ಕೇಳಿಬಂದಿದೆ. ಗಾಬರಿಗೊಂಡ ಅವರು ಹತ್ತಿರ ಹೋಗಿ ನೋಡಿದಾಗ, ಅಲ್ಲಿನ ದೃಶ್ಯ ಕಂಡು ಕಣ್ಣೀರು ಹಾಕಿದ್ದಾರೆ. ರಕ್ತಸಿಕ್ತವಾದ ಸ್ಥಿತಿಯಲ್ಲಿದ್ದ ನವಜಾತ ಹೆಣ್ಣು ಮಗುವನ್ನು ಹಳೆಯ ಟವೆಲ್&zwnj;ನಲ್ಲಿ ಸುತ್ತಿ ಪೊದೆಯಲ್ಲಿ ಬಿಟ್ಟು ಹೋಗಿರುವುದು ಕಂಡಿಬಂದಿದೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳ ತಕ್ಷಣದ ಸ್ಪಂದನೆ:&lt;/strong&gt;&lt;/h3&gt;&lt;p&gt;ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಅವರು ಸ್ಥಳಕ್ಕೆ ಧಾವಿಸಿ ಮಗುವನ್ನು ಎತ್ತಿಕೊಂಡು ಪ್ರಾಥಮಿಕ ಆರೈಕೆ ಮಾಡಿದ್ದಾರೆ. ಕೂಡಲೇ ಎನ್.ಆರ್.ಪುರ ಸಿಡಿಪಿಓ (CDPO) ವೀರೇಶ್, ಸ್ಥಳೀಯ ಪೊಲೀಸರು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಗುವನ್ನು ತಕ್ಷಣವೇ ಎನ್.ಆರ್.ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಮಗುವಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h2&gt;&lt;strong&gt;ದತ್ತು ಸಂಸ್ಥೆಯ ರಕ್ಷಣೆಯಲ್ಲಿ ಮಗು:&lt;/strong&gt;&lt;/h2&gt;&lt;p&gt;ಪ್ರಸ್ತುತ ಮಗು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕ್ಕಮಗಳೂರಿನ ಸರ್ಕಾರಿ ವಿಶೇಷ ದತ್ತು ಸಂಸ್ಥೆಯ ನೇತೃತ್ವದಲ್ಲಿ ಮಗುವಿನ ಆರೈಕೆ ಮಾಡಲಾಗುತ್ತಿದೆ. ಮಗು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಅದನ್ನು ಚಿಕ್ಕಮಗಳೂರಿನ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಹಸ್ತಾಂತರಿಸಲಾಗುವುದು. ಅಲ್ಲಿ ಮಗುವಿನ ಲಾಲನೆ ಪೋಷಣೆ ನಡೆಯಲಿದೆ ಎಂದು ಸಿಡಿಪಿಓ ವೀರೇಶ್ ಮಾಹಿತಿ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ದೂರು ದಾಖಲು:&lt;/strong&gt;&lt;/h3&gt;&lt;p&gt;ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಅನಾಥವಾಗಿ ಬಿಟ್ಟು ಹೋದವರು ಯಾರು? ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಣ್ಣು ಮಗು ಎಂಬ ಕಾರಣಕ್ಕೆ ಯಾರಾದರೂ ಈ ರೀತಿ ಮಾಡಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಒಂದೆಡೆ ಹೆಣ್ಣು ಮಕ್ಕಳು ದೇಶದ ಹೆಮ್ಮೆ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ಹುಟ್ಟಿದ ಎರಡೇ ಗಂಟೆಗಳಲ್ಲಿ ಮಗುವನ್ನು ಪೊದೆಯಲ್ಲಿ ಎಸೆಯುವ ಇಂತಹ ಘಟನೆಗಳು ಸಮಾಜದ ಕ್ರೌರ್ಯಕ್ಕೆ ಕನ್ನಡಿ ಹಿಡಿದಂತಿವೆ. ಸದ್ಯ ಮಗು ಸುರಕ್ಷಿತವಾಗಿದ್ದು, ಮಗುವಿನ ಚಿಕಿತ್ಸೆಗೆ ಇಡೀ ಜಿಲ್ಲಾಡಳಿತ ಸ್ಪಂದಿಸಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-nr-pura-newborn-baby-girl-abandoned-in-bushes-rescued-sat/articleshow-9op7x8f"/>
        </item>
        <item>
            <title><![CDATA[ಚಿಕ್ಕಮಗಳೂರು: ಅಪಘಾತಕ್ಕೀಡಾದ ಯುವಕನಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆಗಳು. 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಟ!]]></title>
            <link>https://kannada.asianetnews.com/karnataka-districts/chikkamagaluru-accident-victim-denied-treatment-by-hospitals-suffers-in-ambulance-for-24-hours/articleshow-c3mv4lr</link>
            <guid isPermaLink="true">https://kannada.asianetnews.com/karnataka-districts/chikkamagaluru-accident-victim-denied-treatment-by-hospitals-suffers-in-ambulance-for-24-hours/articleshow-c3mv4lr</guid>
            <pubDate>Wed, 20 May 2026 12:49:10 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ ಅಪಘಾತಕ್ಕೀಡಾದ ಯುವಕನೊಬ್ಬನಿಗೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್&zwnj;ನಲ್ಲೇ ನರಳಬೇಕಾಯಿತು. ಚಿಕ್ಕಮಗಳೂರು ಮತ್ತು ಮಂಗಳೂರಿನ ಹಲವು ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಈ ಘಟನೆ, ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks23tta7hyvs40y8743spvqb,imgname-1-1779261335879.png" type="image/jpeg" height="390" width="690"/>
            <content:encoded><![CDATA[&lt;p&gt;ವರದಿ : &lt;strong&gt;ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು(ಮೇ.20):&lt;/strong&gt; ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡ ಯುವಕನೊಬ್ಬನಿಗೆ ಆಸ್ಪತ್ರೆಯಲ್ಲಿ ಬೆಡ್ ಹಾಗೂ ತುರ್ತು ಚಿಕಿತ್ಸೆಗೆ ವೈದ್ಯರು ಸಿಗದ ಹಿನ್ನೆಲೆ ಸುಮಾರು 24 ಗಂಟೆಗಳ ಕಾಲ ಆಂಬುಲೆನ್ಸ್&zwnj;ನಲ್ಲೇ ನರಳಾಡಬೇಕಾದ ಆಘಾತಕಾರಿ ಘಟನೆ ಕಾಫಿನಾಡಿನಲ್ಲಿ ನಡೆದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ಮೇಲೂ ಗಂಭೀರ ಪ್ರಶ್ನೆಗಳು ಎದ್ದಿವೆ.&lt;/p&gt;&lt;h2&gt;ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ&lt;/h2&gt;&lt;p&gt;ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪ ರವಿ ಎಂಬ ಯುವಕ ಬೈಕ್&zwnj;ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣವೇ ಆತನನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿ ಮಂಗಳೂರಿನ ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಇದಾದ ಬಳಿಕ ಕುಟುಂಬಸ್ಥರು ಆಂಬುಲೆನ್ಸ್ ಮೂಲಕ ಮಂಗಳೂರಿಗೆ ತೆರಳಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;&lt;h3&gt;ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ&lt;/h3&gt;&lt;p&gt;ಮಂಗಳೂರಿಗೆ ತೆರಳಿದ ಕುಟುಂಬ ಅಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ. ಪರಿಸ್ಥಿತಿ ಮತ್ತಷ್ಟು ದುರ್ಭಾಗ್ಯಕರವಾಗಿತ್ತು. ವೆನ್ಲಕ್ ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸರ್ಜನ್ ಲಭ್ಯವಿಲ್ಲ ಎಂದು ಹೇಳಿ ರೋಗಿಯನ್ನು ದಾಖಲಿಸಿಕೊಳ್ಳಲಾಗಿಲ್ಲ ಎನ್ನಲಾಗಿದೆ. ಬಳಿಕ ಕುಟುಂಬಸ್ಥರು ಫಾದರ್ ಮುಲ್ಲಾ ಗೆ ತೆರಳಿದರೂ ಅಲ್ಲಿಯೂ ಬೆಡ್ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನಿರಾಕರಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರ ನಂತರ ಮುಕ್ಕಾದಲ್ಲಿರುವ ಶ್ರೀನಿವಾಸ್ ಆಸ್ಪತ್ರೆಗೆ ತೆರಳಿದಾಗ, ಚಿಕಿತ್ಸೆಗಾಗಿ ಮುಂಗಡವಾಗಿ ₹80 ಸಾವಿರ ಹಣ ಠೇವಣಿ ಇಡಬೇಕೆಂದು ಆಸ್ಪತ್ರೆ ಆಡಳಿತ ತಿಳಿಸಿದೆ ಎನ್ನಲಾಗಿದೆ.&lt;/p&gt;&lt;p&gt;ಗಾರೆ ಕೆಲಸ ಮಾಡಿ ಜೀವನ ಸಾಗಿಸುವ ಬಡ ಕುಟುಂಬಕ್ಕೆ ಇಷ್ಟು ದೊಡ್ಡ ಮೊತ್ತ ಒದಗಿಸುವುದು ಅಸಾಧ್ಯವಾಗಿದ್ದು, ಕೊನೆಗೆ ಅವರು ಮತ್ತೆ ಆಂಬುಲೆನ್ಸ್&zwnj;ನಲ್ಲೇ ಮಗನನ್ನು ಕರೆತಂದು ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಗ್ರಾಮ ಸಮೀಪ ರಸ್ತೆ ಬದಿಯಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಎದುರಾಯಿತು. ಆಂಬುಲೆನ್ಸ್&zwnj;ನಲ್ಲೇ ನರಳುತ್ತಿದ್ದ ಯುವಕನನ್ನು ಕಂಡ ಸ್ಥಳೀಯ ಗ್ರಾಮಸ್ಥರು ಕುಟುಂಬಕ್ಕೆ ಧೈರ್ಯ ತುಂಬಿ, ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ. ಬಳಿಕ ಕುಟುಂಬಸ್ಥರು ಅಲ್ಲಿಗೆ ತೆರಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;&lt;img&gt;&lt;/p&gt;&lt;h3&gt;ಮೆಡಿಕಲ್ ಕಾಲೇಜು ಹೆಸರಿಗಷ್ಟೇನಾ ?&lt;/h3&gt;&lt;p&gt;ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವ ರೋಗಿಗೆ ಬೆಡ್ ಇಲ್ಲ, ಡಾಕ್ಟರ್ ಇಲ್ಲ, ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಗಳು ಇರೋದಾದರೆ ಯಾಕೆ? ಇಂಥ ಪರಿಸ್ಹಿತಿಯಲ್ಲಿ ಬಡವರು, ಸಾಮಾನ್ಯ ಜನರು ಏನು ಮಾಡಬೇಕು? ಇದೇ ವೇಳೆ, ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಕಾಲೇಜು ಇದ್ದರೂ ಗಂಭೀರ ರೋಗಿಗಳನ್ನು ಇನ್ನೂ ಹೊರ ಜಿಲ್ಲೆಗಳ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿರುವುದು ಆರೋಗ್ಯ ವ್ಯವಸ್ಥೆಯ ದುರ್ಬಲತೆಯನ್ನು ಎತ್ತಿತೋರಿಸಿದೆ. ಮೆಡಿಕಲ್ ಕಾಲೇಜು ಹೆಸರಿಗಷ್ಟೇನಾ? ಜಿಲ್ಲೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಜನರು ಯಾರನ್ನು ನಂಬಬೇಕು?ಎಂಬ ಆಕ್ರೋಶವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.ಘಟನೆ ಕುರಿತು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೂಕ್ತ ತನಿಖೆ ನಡೆಸಿ, ಇಂತಹ ದುಸ್ಥಿತಿ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/chikkamagaluru-accident-victim-denied-treatment-by-hospitals-suffers-in-ambulance-for-24-hours/articleshow-c3mv4lr"/>
        </item>
        <item>
            <title><![CDATA[ರಾಷ್ಟ್ರೀಯತೆ ಎನ್ನುವುದು ತಾಯಿ ಮಕ್ಕಳ ಸಂಬಂಧ ಇದ್ದಂತೆ: ಸಿ.ಟಿ.ರವಿ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/ct-ravi-says-bjp-is-ideological-movement-at-chikkamagaluru-gvd/articleshow-cxt7y9p</link>
            <guid isPermaLink="true">https://kannada.asianetnews.com/karnataka-districts/ct-ravi-says-bjp-is-ideological-movement-at-chikkamagaluru-gvd/articleshow-cxt7y9p</guid>
            <pubDate>Sat, 23 May 2026 19:36:07 +0530</pubDate>
            <description><![CDATA[&lt;p&gt;ಭಾರತೀಯ ಜನತಾ ಪಕ್ಷ ಎನ್ನುವುದು ಕೇವಲ ಒಂದು ರಾಜಕೀಯ ಪಕ್ಷವಲ್ಲ. ಅದು ಒಂದು ಸೈದ್ದಾಂತಿಕ ಆಂದೋಲನ. ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಹರಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kcx4fyk1p4nrct4gxgmzs4x5,imgname-1-1766209354337.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ತರೀಕೆರೆ (ಮೇ.23): &lt;/strong&gt;ಭಾರತೀಯ ಜನತಾ ಪಕ್ಷ ಎನ್ನುವುದು ಕೇವಲ ಒಂದು ರಾಜಕೀಯ ಪಕ್ಷವಲ್ಲ. ಅದು ಒಂದು ಸೈದ್ದಾಂತಿಕ ಆಂದೋಲನ. ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಹರಡಿದೆ. ಭಾರತೀಯ ಚಿಂತನೆಗಳು ಜಗತ್ತಿನ ಕಲ್ಯಾಣ ಬಯಸುತ್ತದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಸಮೀಪದ ಲಿಂಗದಹಳ್ಳಿ ಬಳಿ ಪ್ರಕೃತಿ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ನಡೆದ 2 ದಿನಗಳ ಬಿಜೆಪಿ ಕರ್ನಾಟಕ ಪ್ರಶಿಕ್ಷಣ ಮಹಾಭಿಯಾನ ಚಿಕ್ಕಮಗಳೂರು-ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.&lt;/p&gt;&lt;p&gt;ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ಪಕ್ಷ. 17 ಕೋಟಿ ಸದಸ್ಯರನ್ನು ಹೊಂದಿರುವ ಈ ಪಕ್ಷ 1850ಕ್ಕೂ ಹೆಚ್ಚು ಶಾಸಕರು, ಸಂಸದರನ್ನು ಹೊಂದಿದೆ. ಬಿಜೆಪಿ ಸೈದ್ದಾಂತಿಕ ಆಂದೋಲನ ಹಂತ ಹಂತವಾಗಿ ಬೆಳೆದಂತೆ ನಾಯಕತ್ವವೂ ಬೆಳೆದಿದೆ. ಈ ಬಗ್ಗೆ ಹೆಚ್ಚು ಅರಿವು ಮೂಡಿಸಲು ಈ ಪ್ರಶಿಕ್ಷಣದ ಮಹಾಭಿಯಾನ. ಸೈದ್ದಾಂತಿಕ ಪ್ರಕ್ರಿಯೆಯೇ ಈ ಕಾರ್ಯಕ್ರಮದ ಉದ್ದೇಶ.&lt;/p&gt;&lt;h2&gt;&lt;strong&gt;ಸರ್ವೇ ಜನೋ ಸುಖಿನೋ ಭವಂತು&lt;/strong&gt;&lt;/h2&gt;&lt;p&gt;ಅಧಿಕಾರ ಒಂದು ಸಾಧನ ಅಷ್ಟೇ, ಅದೇ ಪ್ರಮುಖ ಅಲ್ಲ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಭಾರತ ವಿಶ್ವಗುರು ವಾಗಬೇಕು ಎನ್ನುವುದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು. ಸೈದ್ದಾಂತಿಕ ಪುನರುತ್ಥಾನ ಆಗಬೇಕು. ಸರ್ವೇ ಜನೋ ಸುಖಿನೋ ಭವಂತು ಎಂಬುದು ನಮ್ಮ ಉದ್ದೇಶ, ಅರ್ಥಿಕ ಬದಲಾವಣೆ ಸರ್ವವ್ಯಾಪಿಯಾಗಬೇಕು. ಪ್ರತಿಯೊಬ್ಬರೂ ಸ್ವಾವಲಂಬಿ, ಅತ್ಮನಿರ್ಬರರಾಗಬೇಕು. ಕಟ್ಟ ಕಡೆ ವ್ಯಕ್ತಿಗೂ ಶಕ್ತಿ ತುಂಬಬೇಕು. ರಾಷ್ಟ್ರೀಯತೆ ಎನ್ನುವುದು ತಾಯಿ ಮಕ್ಕಳ ಸಂಬಂಧ ಇದ್ದಂತೆ, ರಾಷ್ಟ್ರ ಮೊದಲು ಎನ್ನುವದು ನಮ್ಮ ಸಿದ್ದಾಂತ.&lt;/p&gt;&lt;p&gt;ಸೈದ್ದಾಂತಿಕ ಬದ್ಧತೆಯಿಂದ ಜನನಾಯಕತ್ವ ಬೆಳೆಸಬೇಕು. ಅದು ಜನಪರ ಹೋರಾಟದ ಮೂಲಕ ಬೆಳೆಯಬೇಕು ಎಂದರು. ಪ್ರಶಿಕ್ಷಣ ವರ್ಗದಲ್ಲಿ ಖಾಲಿ ಪಾತ್ರೆಯಂತೆ ಕುಳಿತು ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು ಎಂದ ಅವರು ಈಗಿನ ಸರ್ಕಾರದ ಪ್ರಚಾರ ಪರ ಇದೆ. ಗ್ಯಾರಂಟಿಗಳ ಜಾಹಿರಾತುಗಳ ಭರಾಟೆಯಲ್ಲಿ ಇದೆ. ಜನರ ಬದುಕು ಶೂನ್ಯವಾಗಿದೆ. ರೈತರ ಆತ್ಮ*ಹತ್ಯೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಇದೆ ಎಂದು ಆರೋಪಿಸಿದರು.&lt;/p&gt;&lt;p&gt;ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ 9 ಮಂಡಲದಲ್ಲಿ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ನಡೆದಿದೆ. ಭಾರತೀಯ ಜನತಾ ಪಕ್ಷ ಇತರ ಪಕ್ಷಗಳಿಗಿಂತ ವಿಭಿನ್ನ. ರಾಷ್ಟ್ರೀಯತೆ ಎತ್ತಿ ಹಿಡಿಯುತ್ತದೆ. ಆನಂತರವೇ ಪಕ್ಷ, ಪ್ರಶಿಕ್ಷಣ ವರ್ಗದಲ್ಲಿ 2 ದಿನಗಳು ಏನನ್ನು ಕಲಿತುಕೊಳ್ಳುತ್ತೇವೆಯೋ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರಶಿಕ್ಷಣ ವರ್ಗದಲ್ಲಿ ಬಹಳಷ್ಟು ವಿಚಾರಗಳು ಚರ್ಚೆಗೆ ಬರುತ್ತದೆ. ಪಕ್ಷದ ಸಾಮಾಜಿಕ ಉದ್ದೇಶ ಮತ್ತು ವ್ಯಕ್ತಿತ್ವ ಹೇಗೆ ರೂಪಿಸಕೊಳ್ಳಬೇಕು ಇತ್ಯಾದಿಗಳು ಖುಷಿಯಿಂದ ಪ್ರಶಿಕ್ಷ ಣ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಿಕ್ಷಣ ವರ್ಗದಲ್ಲಿ ವಿದ್ಯಾರ್ಥಿಗಳ ರೀತಿ ಕುಳಿತುಕೊಳ್ಳಬೇಕು ಎಂದು ಹೇಳಿದರು.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ct-ravi-says-bjp-is-ideological-movement-at-chikkamagaluru-gvd/articleshow-cxt7y9p"/>
        </item>
        <item>
            <title><![CDATA[ರಕ್ಷಿಸಬೇಕಾದ ಎಪಿಎಂಸಿಗಳಲ್ಲಿಯೇ ರೈತರಿಗೆ ಅನ್ಯಾಯ: ಸಿ.ಟಿ.ರವಿ ಎಚ್ಚರಿಕೆ]]></title>
            <link>https://kannada.asianetnews.com/karnataka-districts/chikkamagaluru-apmc-beans-price-farmers-protest-ct-ravi-gvd/articleshow-e622ybr</link>
            <guid isPermaLink="true">https://kannada.asianetnews.com/karnataka-districts/chikkamagaluru-apmc-beans-price-farmers-protest-ct-ravi-gvd/articleshow-e622ybr</guid>
            <pubDate>Mon, 25 May 2026 17:24:50 +0530</pubDate>
            <description><![CDATA[&lt;p&gt;ರೈತರನ್ನು ರಕ್ಷಿಸಬೇಕಾದ ಎಪಿಎಂಸಿಯಲ್ಲೇ ರೈತರಿಗೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶಿಸಬೇಕು ಇಲ್ಲವಾದರೆ, ಹೋರಾಟ ಅನಿವಾರ್ಯವಾಗಲಿದೆ ಎಂದು ಸಿ.ಟಿ.ರವಿ ಎಚ್ಚರಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kcx4fyk1p4nrct4gxgmzs4x5,imgname-1-1766209354337.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.25):&lt;/strong&gt; ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ರಕ್ಷಿಸಬೇಕಾದ ಎಪಿಎಂಸಿಯಲ್ಲೇ ರೈತರಿಗೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶಿಸಬೇಕು ಇಲ್ಲವಾದರೆ, ಹೋರಾಟ ಅನಿವಾರ್ಯವಾಗಲಿದೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಎಚ್ಚರಿಸಿದ್ದಾರೆ.&lt;/p&gt;&lt;p&gt;ಚಿಕ್ಕಮಗಳೂರಿನ ಎಪಿಎಂಸಿ ಗೇಟ್&zwnj;ಗೆ ಬೀಗ ಹಾಕಿ ರೈತರ ಪ್ರತಿಭಟನೆ ಕುರಿತು ಪ್ರಕ್ರಿಯಿಸಿರುವ ಅವರು, ಇಂದು ಮೈಸೂರಿನ ಎಪಿಎಂಸಿಯಲ್ಲಿ ಪ್ರತಿ ಕೆಜಿ ಬೀನ್ಸ್&zwnj; ಬೆಲೆ ₹85 ನಿಂದ ₹90 ಇದೆ. ಆದರೆ, ಚಿಕ್ಕಮಗಳೂರಿನಲ್ಲಿ ಕೇವಲ ₹35 ನಿಂದ ₹40 ದರ ಇದೆ. ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ರಕ್ಷಿಸಬೇಕಾದ ಎಪಿಎಂಸಿಯಲ್ಲೇ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು.&lt;/p&gt;&lt;p&gt;ರೈತರನ್ನು ದೊಡ್ಡ ವ್ಯಾಪಾರಿಗಳ ಏಕಸ್ವಾಮ್ಯದಿಂದ, ಮಧ್ಯವರ್ತಿಗಳ ಹಾವಳಿಯಿಂದ ರಕ್ಷಿಸಲು ಎಪಿಎಂಸಿ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೆ, ಇಂತಹ ವ್ಯವಸ್ಥೆಯಲ್ಲೂ ರೈತರಿಗೆ ಅನ್ಯಾಯವಾದರೆ, ಅಮಾಯಕ ರೈತರು ಎಲ್ಲಿಗೆ ಹೋಗಬೇಕು?, ಯಾರಲ್ಲಿ ನ್ಯಾಯ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಚಿಕ್ಕಮಗಳೂರಿನಲ್ಲಿ ಬೀನ್ಸ್ ಬೆಳೆದು, ಮಾರುಕಟ್ಟೆಯಲ್ಲಿ ಅತ್ಯುತ್ತಮ ದರ ಇದೆ ಎಂದು ಸಂಭ್ರಮದಿಂದ ಎಪಿಎಂಸಿಗೆ ಬಂದ ರೈತರು ಕಣ್ಣೀರಿಡುವ ಪರಿಸ್ಥಿತಿ ತರಲಾಗಿದೆ. ಇದಕ್ಕೆ ಹೊಣೆ ಯಾರು?. ಸಾಮಾನ್ಯ ಗ್ರಾಹಕರಿಗೆ ಪ್ರತಿ ಕೆಜಿ ಬಿನ್ಸ್&zwnj; ಬೆಲೆ ₹150 ಗೂ ಅಧಿಕ ಬೆಲೆಗೆ ಬೀನ್ಸ್ ಮಾರಾಟವಾಗುತ್ತಿದೆ. ಆದರೆ, ಚಿಕ್ಕಮಗಳೂರಿನ ರೈತರಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ.&lt;/p&gt;&lt;h2&gt;&lt;strong&gt;ಯಾವುದೇ ಕ್ರಮ ಕೈಗೊಂಡಿಲ್ಲ&lt;/strong&gt;&lt;/h2&gt;&lt;p&gt;ಮಳೆ ವ್ಯತ್ಯಯದ ನಡುವೆ ರೈತರು ಕಷ್ಟಪಟ್ಟು ಕೃಷಿ ಮಾಡಿ ಬೀನ್ಸ್ ಬೆಳೆದಿದ್ದಾರೆ. ಆದರೆ, ಮಧ್ಯವರ್ತಿಗಳು ನೇರವಾಗಿಯೇ ಅನ್ಯಾಯ ಎಸಗುತ್ತಿದ್ದರೂ ಅಧಿಕಾರಿಗಳೇಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಅಧಿಕಾರಿಗಳ ಕೈ ಕಟ್ಟಿಹಾಕಿರುವುದು ಯಾರು?, ಕುರ್ಚಿ ಕಿತ್ತಾಟ, ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಕುರಿತು ಸ್ವಲ್ಪವೂ ಕಾಳಜಿಯಿಲ್ಲ ವಾಗಿದೆ ಎಂದು ಕಿಡಿಕಾರಿದ್ದಾರೆ.&lt;/p&gt;&lt;p&gt;ತರಕಾರಿ ಬೆಳೆಗಾರರು ಬೀದಿಗಿಳಿಯುವ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರ ತಂದಿದೆ. ರೈತರನ್ನು ಬೀದಿಗೆ ತಂದ, ರೈತರ ಆಕ್ರೋಶಕ್ಕೆ ಕಾರಣವಾದ ಯಾವ ಸರ್ಕಾರವೂ ಉಳಿದಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯಲ್ಲ ಎಂದು ಹೇಳಿದ್ದಾರೆ.&lt;/p&gt;&lt;p&gt;ಎಲ್ಲ ಎಪಿಎಂಸಿಗಳಲ್ಲೂ ಸಮಾನ ಸ್ವರೂಪದ ಬೆಲೆಗೆ ತರಕಾರಿ ಖರೀದಿಯಾಗುವಂತೆ ಸರ್ಕಾರ ಸೂಚನೆ ನೀಡಬೇಕು. ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಮಧ್ಯವರ್ತಿಗಳು ಮನಬಂದಂತೆ ಬೆಲೆ ನಿಗದಿಪಡಿಸುತ್ತಿದ್ದಾರೆ ಎಂದರೆ ಅಧಿಕಾರಿಗಳು ಅತ್ತ ಗಮನ ಹರಿಸುವಂತೆ ತಕ್ಷಣವೇ ಸೂಚನೆ ನೀಡಬೇಕು. ಈ ಸಮಸ್ಯೆಗೆ ತಕ್ಷಣವೇ ಪರಿಹಾರ ಒದಗಿಸಲು ಸಾಧ್ಯವಾಗದಿದ್ದರೆ, ನಾವು ರೈತರ ಜೊತೆಗೂಡಿ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chikkamagaluru-apmc-beans-price-farmers-protest-ct-ravi-gvd/articleshow-e622ybr"/>
        </item>
        <item>
            <title><![CDATA[ಬೆಲಗೂರು-ಶೃಂಗೇರಿ: ಸಂಚಾರ ಆರಂಭಿಸಿದ ಹೊಸ ಬಸ್‌ನ ವಿಶೇಷವೇನು? ಯಾರಿಗೆಲ್ಲಾ ಅನುಕೂಲ]]></title>
            <link>https://kannada.asianetnews.com/karnataka-districts/belaguru-to-sringeri-what-s-special-about-the-new-ksrtc-bus-that-started-operating-it-will-benefit-everyone-mrq/articleshow-eynqd4i</link>
            <guid isPermaLink="true">https://kannada.asianetnews.com/karnataka-districts/belaguru-to-sringeri-what-s-special-about-the-new-ksrtc-bus-that-started-operating-it-will-benefit-everyone-mrq/articleshow-eynqd4i</guid>
            <pubDate>Thu, 04 Jun 2026 07:42:33 +0530</pubDate>
            <description><![CDATA[&lt;p&gt;ಬೆಲಗೂರಿನಿಂದ ಶೃಂಗೇರಿಗೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭಗೊಂಡಿದ್ದು, ಎನ್.ಆರ್.ಪುರ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಹೊಸ ಸೇವೆಯು ಶಕ್ತಿ ಯೋಜನೆಯಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಮತ್ತು ಇತರ ಪ್ರಯಾಣಿಕರಿಗೆ ಹೆಚ್ಚು ಅನುಕೂಲಕರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt86b5a8r8tng9gawy6qbppd,imgname-ksrtc-1780539037000.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನರಸಿಂಹರಾಜಪುರ:&lt;/strong&gt; ಬೆಲಗೂರಿನಿಂದ ಶೃಂಗೇರಿಗೆ ನೂತನ ಬಸ್ ಸಂಚಾರ ಪ್ರಾರಂಭಿಸಿರುವುದು ಮಹಿಳಾ ಪ್ರಯಾಣಿಕರಿಗೆ ಅತ್ಯಂತ ಅನುಕೂಲವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಇಂದಿರಾನಗರ ರಘು ಹರ್ಷ ವ್ಯಕ್ತಪಡಿಸಿದರು. ಮಂಗಳವಾರ ಬೆಲಗೂರಿನಿಂದ ಶೃಂಗೇರಿ ಮಾರ್ಗಕ್ಕೆ ಕೆಎಸ್.ಆರ್.ಟಿ. ಬಸ್ ನೂತನವಾಗಿ ಸಂಚಾರ ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;p&gt;ಶೃಂಗೇರಿ ಕ್ಷೇತ್ರದ ಶಾಸಕರು ಹಾಗೂ ಹೊಸದುರ್ಗ ಶಾಸಕರು ಈ ಬಸ್ ಸಂಚಾರಕ್ಕಾಗಿ ಶ್ರಮವಹಿಸಿದ್ದು ಇದರಿಂದ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿದೆ. ಈ ಮಾರ್ಗವೂ ಕೂಡ ಸೂಕ್ತ ಮಾರ್ಗವಾಗಿದೆ. ಈ ಬಸ್ಸಿನ ಸದುಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.&lt;/p&gt;&lt;h2&gt;&lt;strong&gt;ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲ&lt;/strong&gt;&lt;/h2&gt;&lt;p&gt;ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಜುಬೇದಾ ಮಾತನಾಡಿ, ಈ ಬಸ್ ಸಂಚಾರದಿಂದ ಮಹಿಳಾ ಯಾತ್ರಿಕರಿಗೆ ಧಾರ್ಮಿಕ ಸ್ಥಳಕ್ಕೆ ತೆರಳಲು ಹಾಗೂ ತರೀಕೆರೆ ಮಾರ್ಗಕ್ಕೆ ಅಧಿಕಾರಿಗಳಿಗೆ, ಕುವೆಂಪು ಯೂನಿವರ್ಸಿಟಿಗೆ ತೆರಳುವ ವಿದ್ಯಾರ್ಥಿಗಳಿಗೂ ಬಹಳಷ್ಟು ಅನುಕೂಲವಾಗಲಿದೆ ಎಂದರು.&lt;/p&gt;&lt;h3&gt;&lt;strong&gt;ಪೂಜೆ ಸಲ್ಲಿಸಿ ಸಿಹಿ ಹಂಚಿಕೆ&lt;/strong&gt;&lt;/h3&gt;&lt;p&gt;ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಬಸ್&zwnj;ಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ, ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಇದೇ ಸಂದರ್ಭದಲ್ಲಿ ನೂತನ ಬಸ್&zwnj;ನ ಚಾಲಕ ಹಾಗೂ ನಿರ್ವಾಹಕರಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಲಾಯಿತು.&lt;/p&gt;&lt;p&gt;ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಬೇಸಿಲ್, ನಾಗರಾಜ್, ಹೂವಮ್ಮ, ನಿತ್ಯಾನಂದ, ಕಾಂಗ್ರೆಸ್ ಪಕ್ಷದ ಮುಖಂಡರಾದ ಈಚಿಕೆರೆ ಸುಂದರೇಶ್, ಸಮೀರಾ ನಹೀಂ, ಬಿ.ವಿ.ಉಪೇಂದ್ರ, ಸುನೀಲ್&zwnj;ಕುಮಾರ್, ನಾಗೇಶ್&zwnj;ಪೂಜಾರಿ, ಪೊಲೀಸ್ ಠಾಣಾಧಿಕಾರಿ ನೂತನ್ ಮತ್ತಿತರರು ಇದ್ದರು.&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belaguru-to-sringeri-what-s-special-about-the-new-ksrtc-bus-that-started-operating-it-will-benefit-everyone-mrq/articleshow-eynqd4i"/>
        </item>
        <item>
            <title><![CDATA[ನಮ್ಮೂರಿಗೆ ರಸ್ತೆಯೂ ಬೇಡ, ಅಭಿವೃದ್ಧಿಯೂ ಬೇಡ; ಸರ್ಕಾರದ ಯೋಜನೆಗಳಿಗೆ ಕಾಫಿನಾಡಿನ ಗ್ರಾಮಸ್ಥರಿಂದಲೇ ವಿರೋಧ!]]></title>
            <link>https://kannada.asianetnews.com/gallery/karnataka-districts/chikkamagaluru-donagudige-village-road-work-protest-local-dispute-aldur-mla-nayana-motramma-sat-gyi0bcf</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-donagudige-village-road-work-protest-local-dispute-aldur-mla-nayana-motramma-sat-gyi0bcf</guid>
            <pubDate>Fri, 05 Jun 2026 13:07:54 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ತಾಲೂಕಿನ ದೋಣಗೂಡಿಗೆ ಗ್ರಾಮದಲ್ಲಿ, ಮಂಜೂರಾದ ರಸ್ತೆ ಕಾಮಗಾರಿಗೆ ಗ್ರಾಮದ ಇಬ್ಬರು ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳು ಮತ್ತು ರೈತರು ಸೇರಿದಂತೆ ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktbb1cwj7sb6carzcps70f00,imgname-chikkamagaluru-village-road-1780644623250.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರು ತಾಲೂಕಿನ ದೋಣಗೂಡಿಗೆ ಗ್ರಾಮದಲ್ಲಿ, ಮಂಜೂರಾದ ರಸ್ತೆ ಕಾಮಗಾರಿಗೆ ಗ್ರಾಮದ ಇಬ್ಬರು ವ್ಯಕ್ತಿಗಳು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಳೆಗಾಲದಲ್ಲಿ ವಿದ್ಯಾರ್ಥಿಗಳು ಮತ್ತು ರೈತರು ಸೇರಿದಂತೆ ಗ್ರಾಮಸ್ಥರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆೆ.&lt;/p&gt;&lt;img&gt;&lt;p&gt;&lt;strong&gt;ಚಿಕ್ಕಮಗಳೂರು (ಜೂ.05): ಸಾ&lt;/strong&gt;ಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದನ್ನು ನಾವು ನೋಡಿದ್ದೇವೆ. ಆದರೆ, ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಪರಿಸ್ಥಿತಿ ತದ್ವಿರುದ್ಧವಾಗಿದೆ. 'ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ' ಎಂದು ಸ್ಥಳೀಯರೇ ಅಡ್ಡಿಪಡಿಸುತ್ತಿರುವ ವಿಚಿತ್ರ ಹಾಗೂ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ದೋಣಗೂಡಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹತ್ತಾರು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯನ್ನು ಸುಧಾರಿಸಲು ಗ್ರಾಮಸ್ಥರೆಲ್ಲರೂ ಸೇರಿ ಶ್ರಮಿಸಿದ್ದರು. ಅಂತೂ ಇಂತೂ ಸರ್ಕಾರದ ಗಮನ ಸೆಳೆದು ರಸ್ತೆ ಕಾಮಗಾರಿ ಮಂಜೂರಾಗಿತ್ತು. ಇತ್ತೀಚೆಗೆ ಸ್ಥಳೀಯ ಶಾಸಕಿ ನಯನಾ ಮೋಟಮ್ಮ ಅವರು ರಸ್ತೆ ಕಾಮಗಾರಿಗೆ ಚಾಲನೆ ಕೂಡ ನೀಡಿದ್ದರು. ಆದರೆ, ಕಾಮಗಾರಿ ಅರ್ಧಕ್ಕೆ ನಿಲ್ಲುವಂತಾಗಿದೆ. ಇದಕ್ಕೆ ಕಾರಣ ಅದೇ ಗ್ರಾಮದ ಕೆಲವರ ವಿರೋಧ!&lt;/p&gt;&lt;img&gt;&lt;p&gt;ಗ್ರಾಮದ ರಸ್ತೆ ಅಭಿವೃದ್ಧಿಗೆ ಅದೇ ಗ್ರಾಮದ ನಿವಾಸಿ ರಮೇಶ್ ಗೌಡ ಎಂಬಾತ ನಿರಂತರವಾಗಿ ಅಡ್ಡಿಪಡಿಸುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈತನಿಗೆ ಪ್ರತೀಕ್ ಎಂಬ ಮತ್ತೊಬ್ಬ ವ್ಯಕ್ತಿ ಸಾಥ್ ನೀಡುತ್ತಿದ್ದಾನೆ. ಈ ಇಬ್ಬರ ವರ್ತನೆಯಿಂದಾಗಿ ಇಡೀ ಗ್ರಾಮದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&amp;nbsp;&lt;/p&gt;&lt;p&gt;ರಸ್ತೆ ಕಾಮಗಾರಿ ಮಂಜೂರಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗ್ರಾಮದ ನಿವಾಸಿ ರಾಜೇಶ್ ಎಂಬುವವರ ಮೇಲೆ ರಮೇಶ್ ಗೌಡ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನಲಾಗಿದೆ. ರಸ್ತೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ರಮೇಶ್, ರಾಜೇಶ್ ಅವರ ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಗ್ರಾಮದ ಹಿರಿಯರಾದ ರುದ್ರೇಗೌಡ ಅಸಮಾಧಾನ ಹೊರಹಾಕಿದ್ದಾರೆ.&lt;/p&gt;&lt;img&gt;&lt;p&gt;ರಸ್ತೆ ಕಾಮಗಾರಿ ಆರಂಭದಲ್ಲಿ ಅತಿ ವೇಗವಾಗಿ ನಡೆದಿತ್ತು. ಆದರೆ ಈ ಕಿರಿಕ್&zwnj;ನಿಂದಾಗಿ ಕಾಮಗಾರಿ ಅರ್ಧಕ್ಕೇ ನಿಂತಿದೆ. ಮಳೆಗಾಲ ಆರಂಭವಾಗಿರುವುದರಿಂದ ರಸ್ತೆ ಕೆಸರುಮಯವಾಗಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವ ರೈತರು ಹಾಗೂ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಬೇಕಾದ ಹಿರಿಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಒಂದೆಡೆ ಸರ್ಕಾರ ರಸ್ತೆ ನೀಡಲು ಮುಂದಾಗಿದ್ದರೂ, ವೈಯಕ್ತಿಕ ದ್ವೇಷ ಅಥವಾ ಇನ್ನಾವುದೋ ಕಾರಣಕ್ಕಾಗಿ ಸಾರ್ವಜನಿಕ ಕೆಲಸಕ್ಕೆ ಅಡ್ಡಿಪಡಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತ ಮಧ್ಯಪ್ರವೇಶಿಸಿ, ಅಡ್ಡಿಪಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ದೋಣಗೂಡಿಗೆ ಗ್ರಾಮಸ್ಥರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.&lt;/p&gt;&lt;p&gt;ಕಾಫಿನಾಡಿನ ಈ 'ವಿಚಿತ್ರ' ವಿರೋಧ ಈಗ ಜಿಲ್ಲಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಶಾಸಕಿ ನಯನಾ ಮೋಟಮ್ಮ ಅವರು ಈ ವಿಚಾರದಲ್ಲಿ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;&lt;p&gt;&lt;strong&gt;ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-donagudige-village-road-work-protest-local-dispute-aldur-mla-nayana-motramma-sat-gyi0bcf"/>
        </item>
        <item>
            <title><![CDATA[Siddaramaiah: ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಕಾಂಗ್ರೆಸ್ ತಕ್ಕ ಪಾಠ ಕಲಿಸುತ್ತೇವೆ; ಅಹಿಂದ ಮುಖಂಡರ ಎಚ್ಚರಿಕೆ!]]></title>
            <link>https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn</link>
            <guid isPermaLink="true">https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn</guid>
            <pubDate>Thu, 28 May 2026 14:06:42 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಚರ್ಚೆಗಳ ಹಿನ್ನೆಲೆಯಲ್ಲಿ, ಅಹಿಂದ ಒಕ್ಕೂಟವು ಕಾಂಗ್ರೆಸ್ ಹೈಕಮಾಂಡ್&zwnj;ಗೆ ತೀವ್ರ ಎಚ್ಚರಿಕೆ ನೀಡಿದೆ. ಸಿದ್ದರಾಮಯ್ಯರನ್ನು ಇನ್ನೂ ಎರಡು ವರ್ಷ ಮುಂದುವರಿಸಬೇಕು, ಇಲ್ಲದಿದ್ದರೆ ಹಿಂದೆ ಹಿಂದಿನ ಘಟನೆ ಪಕ್ಷಕ್ಕೆ ಮರುಕಳಿಸಲಿದೆ ಎಂದು ಎಚ್ಚರಿಕೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kspv898ava6kryawez5ppyfs,imgname-----------------------2026-05-28t135551.084-1779956983050.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.28) &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಅಹಿಂದ ಒಕ್ಕೂಟ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.&lt;/p&gt;&lt;h2&gt;ಕಾಂಗ್ರೆಸ್ ಹೈಕಮಾಂಡ್&zwnj;ಗೆ ಅಹಿಂದ ಒಕ್ಕೂಟ ಎಚ್ಚರಿಕೆ&lt;/h2&gt;&lt;p&gt;ಸಿದ್ದರಾಮಯ್ಯ ರಾಜೀನಾಮೆ ಕುರಿತಂತೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅಹಿಂದ ಮುಖಂಡ ಪುಟ್ಟೇಗೌಡ, 'ರಾತ್ರೋರಾತ್ರಿ ಸಿಎಂ ಬದಲಾವಣೆ ಮಾಡಿದರೆ ಅದರ ಪರಿಣಾಮ ಏನಾಗುತ್ತದೆ ಎಂಬುದು ಕಾಂಗ್ರೆಸ್&zwnj;ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್ ಭವಿಷ್ಯ ಸುರಕ್ಷಿತವಾಗಿರಬೇಕಾದರೆ ಸಿದ್ದರಾಮಯ್ಯರಿಗೆ ಇನ್ನೂ ಎರಡು ವರ್ಷ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.&lt;/p&gt;&lt;h3&gt;ಸಿದ್ದರಾಮಯ್ಯರನ್ನ ಇನ್ನೂ ಎರಡು ವರ್ಷ ಗೌರವದಿಂದ ನಡೆಸಿಕೊಳ್ಳಿ&lt;/h3&gt;&lt;p&gt;ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೌರವಯುತವಾಗಿ ಇನ್ನೂ ಎರಡು ವರ್ಷ ಅಧಿಕಾರ ನೀಡಬೇಕು ಎಂದು ಪುಟ್ಟೇಗೌಡ ಹೇಳಿದರು. ಒಂದು ವೇಳೆ ಈಗಲೇ ನಾಯಕತ್ವ ಬದಲಾವಣೆ ಮಾಡಿದರೆ, ಅದರ ಪರಿಣಾಮವನ್ನು ಕಾಂಗ್ರೆಸ್ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ. ಈಗ ಕಾಂಗ್ರೆಸ್ ಇಟ್ಟಿರೋ ಹೆಜ್ಜೆ ತಕ್ಕ ಪಾಠ ಕಲಿಯುತ್ತೆ ಎಂದು ಎಚ್ಚರಿಸಿದರು.&lt;/p&gt;&lt;p&gt;&lt;strong&gt;ಹಳೆಯ ಇತಿಹಾಸ ನೆನಪಿಸಿದ ಅಹಿಂದ ನಾಯಕರು&lt;/strong&gt;&lt;/p&gt;&lt;p&gt;ಕಾಂಗ್ರೆಸ್&zwnj;ನ ಹಿಂದಿನ ರಾಜಕೀಯ ಘಟನೆಗಳನ್ನು ಉಲ್ಲೇಖಿಸಿದ ಪುಟ್ಟೇಗೌಡ, ಈ ಹಿಂದೆ ಬಂಗಾರಪ್ಪ, ದೇವರಾಜ್ ಅರಸು, ವೀರಪ್ಪಮೊಯ್ಲಿಯನ್ನು ರಾತ್ರೋರಾತ್ರಿ ತೆಗೆದಿದ್ರು. ಆಗ ಕಾಂಗ್ರೆಸ್ ಏನಾಗಿದೆ ಅನ್ನೋದು ಅದರ ಕಣ್ಮುಂದೆಯೇ ಅದರ ಇತಿಹಾಸ ಇದೆ. ಆ ತಪ್ಪು ಮತ್ತೆ ಮರುಕಳಿಸಬಾರದು ಎಂದು ಅಹಿಂದ ಮತ್ತು ಹಿಂದುಳಿದ ವರ್ಗಗಳು ಎಚ್ಚರಿಸುತ್ತಿವೆ ಎಂದರು.&lt;/p&gt;&lt;p&gt;&lt;strong&gt;ಕಾಂಗ್ರೆಸ್&zwnj;ಗೆ ಪರೋಕ್ಷ ಎಚ್ಚರಿಕೆ&lt;/strong&gt;&lt;/p&gt;&lt;p&gt;ನಾವು ಕಾಂಗ್ರೆಸ್&zwnj;ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಇಂತಹ ನಿರ್ಧಾರಗಳ ನಂತರ ಪಕ್ಷದ ಪರಿಸ್ಥಿತಿ ಏನಾಗುತ್ತದೆ ಎಂಬುದು ಪಕ್ಷಕ್ಕೆ ಚೆನ್ನಾಗಿ ಗೊತ್ತಿದೆ. ಸಿದ್ದರಾಮಯ್ಯರನ್ನು ಗೌರವಯುತವಾಗಿ ಮುಂದುವರಿಸಬೇಕು ಎಂಬ ಒತ್ತಾಯದ ಜೊತೆಗೆ, ಅಹಿಂದ ಸಮುದಾಯದ ಭಾವನೆಗಳನ್ನು ಕಡೆಗಣಿಸಬಾರದು ಎಂದು ಕಾಂಗ್ರೆಸ್ ನಾಯಕತ್ವಕ್ಕೆ ಪರೋಕ್ಷ ಸಂದೇಶ ನೀಡಿದರು.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/siddaramaiah-resigns-as-cm-we-will-teach-congress-a-lesson-ahinda-leaders-warn/articleshow-gzf9mgn"/>
        </item>
        <item>
            <title><![CDATA[ಸಾಧನಾ ಸಮಾವೇಶಕ್ಕೂ‌ ಮೊದಲು ಕಾಂಗ್ರೆಸ್ ಸರ್ಕಾರದ ಸಾಧನೆ ಸ್ಪಷ್ಟಪಡಿಸಲಿ: ಸಿ.ಟಿ.ರವಿ ಪ್ರಶ್ನೆ]]></title>
            <link>https://kannada.asianetnews.com/karnataka-districts/mlc-ct-ravi-questions-congress-government-achievements-gvd/articleshow-hh0gmp5</link>
            <guid isPermaLink="true">https://kannada.asianetnews.com/karnataka-districts/mlc-ct-ravi-questions-congress-government-achievements-gvd/articleshow-hh0gmp5</guid>
            <pubDate>Sun, 17 May 2026 22:56:19 +0530</pubDate>
            <description><![CDATA[&lt;p&gt;ಕಾರ್ಮಿಕ ಇಲಾಖೆ ದುಡ್ಡು ತಿಂದಿದ್ದು, ಎಸ್ ಸಿಪಿ ಎಸ್ ಟಿಪಿ ಅನುದಾನ ದುರ್ಬಳಕೆ ಮಾಡಿ ಶಾಲಾ ಮಕ್ಕಳ ಮನಸ್ಸಿನಲ್ಲಿ ಮತೀಯ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಸರ್ಕಾರದ ಸಾಧನೆಯೇ? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kcx4fyk1p4nrct4gxgmzs4x5,imgname-1-1766209354337.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.17): &lt;/strong&gt;ವಾಲ್ಮೀಕಿ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ ದುಡ್ಡು ತಿಂದಿದ್ದು, ಎಸ್ ಸಿಪಿ ಎಸ್ ಟಿಪಿ ಅನುದಾನ ದುರ್ಬಳಕೆ ಮಾಡಿ ಶಾಲಾ ಮಕ್ಕಳ ಮನಸ್ಸಿನಲ್ಲಿ ಮತೀಯ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಸರ್ಕಾರದ ಸಾಧನೆಯೇ? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ ಮೂರು ವರ್ಷ ಮನೆಹಾಳು ಕೆಲಸ&zwnj;ಮಾಡಿ ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಸಮಾವೇಶ ಮಾಡುವ ಮೊದಲು ತಾವು ಏನು ಸಾಧನೆ ಮಾಡಿದ್ದೇವೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.&lt;/p&gt;&lt;p&gt;ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊಳವೆ ಬಾವಿ ಕೊರೆಸಲು ಹಣ ನೀಡಿಲ್ಲ. ಗೃಹ ಲಕ್ಷ್ಮಿ ಹಣ 10 ತಿಂಗಳು ನೀಡಿ ಎರಡು ತಿಂಗಳ ಹಣ ನುಂಗಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲೇ ಪ್ರಶ್ನೆ ಮಾಡಿದರೂ ಉತ್ತರ ನೀಡಿಲ್ಲ. ಈ ಸರ್ಕಾರ ಮಾಡಿರುವುದು ಲೂಟಿ ಹಾಗೂ ಅಧಿಕಾರ ದುರ್ಬಳಕೆ. ಇದಾವುದೂ ಸಾಧನೆಯಾಗಲು ಸಾಧ್ಯವಿಲ್ಲ ಎಂದರು.&lt;/p&gt;&lt;p&gt;ಬಡವರಿಗೆ ಎಷ್ಟು ಗೃಹ ಭಾಗ್ಯ ನೀಡಿದ್ದೇವೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಎಷ್ಟು ಮನೆ ನೀಡಿದ್ದೇವೆ. ರಾಜ್ಯದಲ್ಲಿ ಯಾವ ನೀರಾವರಿ ಯೋಜನೆ ಪೂರ್ಣಗೊಳಿಸಿದ್ದೇವೆ. ಉದ್ಯೋಗ ಸೃಷ್ಟಿ ಮಾಡುವ ಯಾವ ಯೋಜನೆ ಮಾಡಿದ್ದೇವೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ಪ್ರಿಯಾಂಕ್ ಖರ್ಗೆಗೆ ಗುಣಪಡಿಸದ ಕಾಯಿಲೆ&lt;/strong&gt;&lt;/h2&gt;&lt;p&gt;ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಆರ್ ಎಸ್ ಎಸ್ ಟೀಕಿಸುವ ಗುಣಪಡಿಸಲಾಗದ ರೋಗವಿದೆ. ಈ ರೋಗವನ್ನು ನಿರ್ಲಕ್ಷ ಮಾಡುವುದೇ ಸೂಕ್ತ. ಈ ರೋಗಕ್ಕೆ ಪ್ರತಿಕ್ರಿಯಿಸಿದಷ್ಟು ಅದು ಕೆರಳುತ್ತದೆ. ಆದರ ಬದಲು ನಿರ್ಲಕ್ಷ್ಯ ಮಾಡಿದರೆ ರೋಗ ಶಮನವಾಗುತ್ತದೆ ಎಂದು ಲೇವಡಿ ಮಾಡಿದರು&zwnj;.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mlc-ct-ravi-questions-congress-government-achievements-gvd/articleshow-hh0gmp5"/>
        </item>
        <item>
            <title><![CDATA[ಡಿ.ಕೆ.ಶಿವಕುಮಾರ್ ಸರ್ಕಾರದ ಮುಂದೆ ದೊಡ್ಡ ಸವಾಲುಗಳಿವೆ: ಸಿ.ಟಿ.ರವಿ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/ct-ravi-on-dk-shivakumar-government-challenges-gvd/articleshow-i9hrvyy</link>
            <guid isPermaLink="true">https://kannada.asianetnews.com/karnataka-districts/ct-ravi-on-dk-shivakumar-government-challenges-gvd/articleshow-i9hrvyy</guid>
            <pubDate>Fri, 05 Jun 2026 19:27:02 +0530</pubDate>
            <description><![CDATA[&lt;p&gt;ಕಾಂಗ್ರೆಸ್&zwnj; ಸರ್ಕಾರದಿಂದ ಯಾವುದೇ ಒಳ್ಳೆಯ ಕೆಲಸ ಆಗಿಲ್ಲ. ಮುಂದಿನ ಎರಡು ವರ್ಷವಾದರೂ ಡಿ.ಕೆ.ಶಿವಕುಮಾರ್&zwnj; ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡಲಿ ಎಂಬ ನಿರೀಕ್ಷೆ ಹೊಂದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kcx4fyk1p4nrct4gxgmzs4x5,imgname-1-1766209354337.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಜೂ.05):&lt;/strong&gt; ಕಳೆದ ಮೂರು ವರ್ಷದ ಅವಧಿಯಲ್ಲಿ ಕಾಂಗ್ರೆಸ್&zwnj; ಸರ್ಕಾರದಿಂದ ಯಾವುದೇ ಒಳ್ಳೆಯ ಕೆಲಸ ಆಗಿಲ್ಲ. ಮುಂದಿನ ಎರಡು ವರ್ಷವಾದರೂ ಡಿ.ಕೆ.ಶಿವಕುಮಾರ್&zwnj; ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡಲಿ ಎಂಬ ನಿರೀಕ್ಷೆ ಹೊಂದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರ ಸರ್ಕಾರ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿತ್ತು. ಬೆಲೆ ಏರಿಕೆ ನಿಯಂತ್ರಣ ಮಾಡುವ ಚಾಲೆಂಜ್ ಡಿ.ಕೆ. ಶಿವಕುಮಾರ್&zwnj; ಸರ್ಕಾರಕ್ಕಿದೆ. ರಾಜ್ಯದಲ್ಲಿ ರೈತರು ಟ್ರಾನ್ಸ್&zwnj;ಫಾರ್ಮರ್&zwnj; ಹಾಕಿಸಿಕೊಳ್ಳುವುದಕ್ಕೆ ₹3 ಲಕ್ಷ ದುಡ್ಡು ಕಟ್ಟಬೇಕಾದ ಅನಿವಾರ್ಯತೆ ಇದೆ. ಭ್ರಷ್ಟಾಚಾರ ನಿರೀಕ್ಷೆಗೂ ಮೀರಿ ಬೆಳೆದಿದೆ ಎಂದರು.&lt;/p&gt;&lt;p&gt;ಮೂಡ, ವಾಲ್ಮೀಕಿ ಹಗರಣಗಳು ಮಾತ್ರವಲ್ಲ ಎಲ್ಲ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ ಶೇ. 60ರಷ್ಟು ದಾಟಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದವರೇ ಆರೋಪ ಮಾಡುತ್ತಿದ್ದಾರೆ. ಬೆಂಗಳೂರು ಒಳ್ಳೆಯ ಕಾರಣಕ್ಕೆ ಹೆಸರಾಗುವುದಕ್ಕಿಂತ ಹೆಚ್ಚಾಗಿ ಕೆಟ್ಟ ಕಾರಣಕ್ಕೆ ಹೆಸರಾಗುತ್ತಿದೆ. ಗುಂಡಿ ಬಿದ್ದ ರಸ್ತೆಗಳು ಬೆಂಗಳೂರನ್ನು ಬೆತ್ತಲೆಗೊಳಿಸುತ್ತಿವೆ. ಒಂದೇ ಒಂದು ಮಳೆ ಬೆಂಗಳೂರಿನ ನಿಜ ಸ್ವರೂಪ ಬಯಲು ಮಾಡಿದೆ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಚಾಲೆಂಜ್ ಡಿ.ಕೆ.ಶಿವಕುಮಾರ್ ಅವರ ಮೇಲಿದೆ ಎಂದರು.&lt;/p&gt;&lt;p&gt;ರಾಜ್ಯದಲ್ಲಿ ಸಮಸ್ಯೆಗಳು ಹೆಚ್ಚಿರುವಾಗ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಷ್ಟು ಘೋಷಣೆಗಳನ್ನು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನಾವು ಸ್ವಾಗತಿಸುತ್ತೇವೆ. ಆದರೆ ಗ್ರಾಮಾಂತರ ಪ್ರದೇಶಗಳಿಗೆ ಬಸ್ ಗಳೇ ಕಡಿತವಾಗಿವೆ. ಇರುವ ಬಸ್ ಗಳು ತಳ್ಳೋ ಮಾಡಲ್ ಗಳಾಗಿವೆ. ಸರ್ಕಾರಿ ಬಸ್ಸುಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಹೊಸ ಬಸ್&zwnj;ಗಳ ಖರೀದಿ ನಡೆದಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಶತ 30- 40 ರಷ್ಟು ಹಾಲಿ ಇದ್ದ ರೂಟ್ ಗಳನ್ನು ಕಡಿತಗೊಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಪ್ರತಿ ವರ್ಷ ರಾಜ್ಯದ ಸಾಲ ₹1.25 ಲಕ್ಷ ಕೋಟಿಯಿಂದ ₹1.30 ಲಕ್ಷ ಕೋಟಿ ವರೆಗೂ ಏರಿಕೆಯಾಗುತ್ತಿದೆ. ಹೀಗಿರುವಾಗ ನೀರಾವರಿ ಯೋಜನೆ ಯಾವಾಗ ಮುಗಿಸುತ್ತೀರಿ ಹಾಗೂ ಉದ್ಯೋಗ ಸೃಷ್ಟಿ ಎಲ್ಲಿ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಈ ಎಲ್ಲಾ ಸವಾಲುಗಳ ನಡುವೆ ಡಿ.ಕೆ.ಶಿವಕುಮಾರ್ ತಮ್ಮ ಹಳೆಯ ಅನುಭವದ ಜೊತೆಗೆ ಹೊಸ ಹುಮ್ಮಸ್ಸಿನೊಂದಿಗೆ ಕೆಲಸ ಮಾಡುವಂತಾಗಬೇಕು. ಒಳ್ಳೆಯ ಕೆಲಸ ಮಾಡಲಿ ಎಂದು ನಾವು ನಿರೀಕ್ಷೆ ಮಾಡುತ್ತೇವೆ.&lt;/p&gt;&lt;p&gt;ಒಳ್ಳೆಯ ಕೆಲಸಕ್ಕೆ ನಾವು ಬೆಂಬಲ ನೀಡುತ್ತೇವೆ. ವಿರೋಧ ಮಾಡಬೇಕು ಎಂಬ ಕಾರಣಕ್ಕಾಗಿಯೇ ಯಾವುದನ್ನು ವಿರೋಧ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನೂತನ ಮುಖ್ಯಮಂತ್ರಿ ಮತ ಬ್ಯಾಂಕಿನ ರಕ್ಷಣೆಗೆ ರಾಜ್ಯದ ಹಿತ ಮುಖ್ಯ ಎನ್ನುವುದನ್ನು ಗಮನ ದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಶಕ್ತಿ ಯೋಜನೆ ಒಳ್ಳೆಯದೇ. ಆದರೆ ಇದರಿಂದ ಕೆಎಸ್ಆರ್ಟಿಸಿಗೆ ನಿಶಕ್ತಿ ಬಂದಿದೆ. ರೂಟ್&zwnj;ಗಳಲ್ಲಿ ಬಸ್ಸೇ ಬರುವುದಿಲ್ಲ ಎಂದರೆ ಉಚಿತ ಪಾಸ್ ನೀಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.&lt;/p&gt;&lt;h2&gt;&lt;strong&gt;ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ಕೊಡಿ&lt;/strong&gt;&lt;/h2&gt;&lt;p&gt;ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪಟ ವಿಸ್ತರಣೆ ವೇಳೆ ಸಚಿವ ಸ್ಥಾನದ ಅವಕಾಶ ಸಿಗಬಹುದೇ ಎಂದು ನೋಡೋಣ. ಜಿಲ್ಲೆಯಲ್ಲಿಯೂ ಅರ್ಹರು ಹಾಗೂ ಅನುಭವಿಗಳು ಇದ್ದಾರೆ. ಚಿಕ್ಕಮಗಳೂರಿನಲ್ಲಿ ಅರ್ಹ ಅನುಭವಿಗಳು ಇಲ್ಲ ಎನ್ನುವ ತೀರ್ಮಾನಕ್ಕೆ ಕಾಂಗ್ರೆಸ್ ನಾಯಕರು ಮಾಡಬಾರದು. ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ಕೊಡಬೇಕು. ಕೊಟ್ಟರೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ct-ravi-on-dk-shivakumar-government-challenges-gvd/articleshow-i9hrvyy"/>
        </item>
        <item>
            <title><![CDATA[ಬೆಂಗಳೂರಿಗೆ ಆಲಿಕಲ್ಲು ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಚಿಕ್ಕಮಗಳೂರಿನಲ್ಲಿ ಬೆಳಗ್ಗಿನಿಂದಲೇ ಮಳೆ]]></title>
            <link>https://kannada.asianetnews.com/state/karnataka-weather-forecast-bengaluru-hailstorm-warning-imd-rain-alert-gdp/articleshow-knq9a02</link>
            <guid isPermaLink="true">https://kannada.asianetnews.com/state/karnataka-weather-forecast-bengaluru-hailstorm-warning-imd-rain-alert-gdp/articleshow-knq9a02</guid>
            <pubDate>Tue, 26 May 2026 15:39:52 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದಾದ್ಯಂತ ಮುಂದಿನ 5-6 ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಶೀಘ್ರದಲ್ಲೇ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಲಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksej4cxa2729x3bzk5zbatde,imgname-rain--1--1779678983082.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಮುಂದಿನ 5 ರಿಂದ 6 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ &lsquo;ಯೆಲ್ಲೋ ಅಲರ್ಟ್&rsquo; (Yellow Alert) ಘೋಷಿಸಲಾಗಿದೆ.&lt;/p&gt;&lt;p&gt;ಮತ್ತೊಂದೆಡೆ, ನೈಋತ್ಯ ಮುಂಗಾರು (Monsoon) ಮಾರುತಗಳ ಪ್ರವೇಶಕ್ಕೆ ವಾತಾವರಣ ಸಂಪೂರ್ಣ ಅನುಕೂಲಕರವಾಗಿದೆ. ಮುಂದಿನ 2-3 ದಿನಗಳಲ್ಲಿ ನೈಋತ್ಯ ಮತ್ತು ಆಗ್ನೇಯ ಸಮುದ್ರ, ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉಳಿದ ಭಾಗಗಳಿಗೆ ಮುಂಗಾರು ಮತ್ತಷ್ಟು ವಿಸ್ತರಿಸಲಿದ್ದು, ಶೀಘ್ರದಲ್ಲೇ ರಾಜ್ಯಕ್ಕೆ ಮುಂಗಾರು ಮಳೆ ಅಧಿಕೃತವಾಗಿ ಪ್ರವೇಶಿಸಲಿದೆ.&lt;/p&gt;&lt;h2&gt;ಬೆಂಗಳೂರಿಗೆ ಆಲಿಕಲ್ಲು ಮಳೆ ಎಚ್ಚರಿಕೆ: ತಾಪಮಾನ ಇಳಿಕೆ&lt;/h2&gt;&lt;p&gt;ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಆರ್ಭಟದಿಂದಾಗಿ ನಗರದ ಉಷ್ಣಾಂಶದಲ್ಲಿ ಗಣನೀಯ ಇಳಿಕೆಯಾಗಲಿದ್ದು, ಗರಿಷ್ಠ ಉಷ್ಣಾಂಶ 32&deg;C ಹಾಗೂ ಕನಿಷ್ಠ ಉಷ್ಣಾಂಶ 22&deg;C ಆಸುಪಾಸಿನಲ್ಲಿ ಇರಲಿದೆ ಎಂದು ಇಲಾಖೆ ತಿಳಿಸಿದೆ. ಆದರೆ, ಮೇ 28 ಮತ್ತು 30 ರಂದು ಮಳೆಯ ಪ್ರಮಾಣ ತಗ್ಗಲಿದ್ದು, ಯಾವುದೇ ಪ್ರಮುಖ ಮುನ್ಸೂಚನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.&lt;/p&gt;&lt;h2&gt;ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ?&lt;/h2&gt;&lt;h3&gt;ದಕ್ಷಿಣ ಒಳನಾಡು (ಭಾರಿ ಮಳೆ):&lt;/h3&gt;&lt;p&gt;&amp;nbsp;ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.&lt;/p&gt;&lt;h3&gt;ಉತ್ತರ ಒಳನಾಡು (ಸಾಧಾರಣ ಮಳೆ):&amp;nbsp;&lt;/h3&gt;&lt;p&gt;ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.&lt;/p&gt;&lt;h3&gt;ಕರಾವಳಿ ಭಾಗ:&amp;nbsp;&lt;/h3&gt;&lt;p&gt;ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ತೀರದಲ್ಲಿ ಗುಡುಗಿನ ಅಬ್ಬರ ಜೋರಾಗಿರಲಿದೆ.&lt;/p&gt;&lt;h2&gt;ಕಾಫಿನಾಡಿನಲ್ಲಿ ವರುಣನ ರೌದ್ರಾವತಾರ: ಕಂಗಾಲಾದ ಪ್ರವಾಸಿಗರು!&lt;/h2&gt;&lt;p&gt;ಸೋಮವಾರ ಚಿಕ್ಕಮಗಳೂರು, ವಿಜಯನಗರ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇವಲ 20 ನಿಮಿಷಗಳ ಕಾಲ ಸುರಿದ ಗುಡುಗು-ಮಿಂಚಿನ ಅಬ್ಬರದ ಮಳೆಗೆ ಇಡೀ ನಗರವೇ ಕಂಗಾಲಾಗಿದೆ. ಸಿಡಿಲಿನ ಹೊಡೆತಕ್ಕೆ ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.&lt;/p&gt;&lt;h2&gt;ಗಿರಿಭಾಗದಲ್ಲಿ ಆತಂಕದ ವಾತಾವರಣ:&lt;/h2&gt;&lt;p&gt;ಮುಳ್ಳಯ್ಯನಗಿರಿ ತಪ್ಪಲು ಹಾಗೂ ದತ್ತಪೀಠದ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳ ಮೇಲೆ ಅರ್ಧ ಅಡಿಯಷ್ಟು ನೀರು ನದಿಯಂತೆ ಹರಿಯುತ್ತಿದೆ. ಭಾರಿ ಗಾಳಿ-ಮಳೆಗೆ ಸಿಲುಕಿದ ಪ್ರವಾಸಿಗರು ವಾಹನ ಚಲಾಯಿಸಲು ಸಾಧ್ಯವಾಗದೆ ಪರದಾಡುವಂತಾಯಿತು. ಪ್ರಸಿದ್ಧ ಹೊನ್ನಮ್ಮನಹಳ್ಳ ಜಲಪಾತವು ಮಳೆಯ ನೀರಿನಿಂದಾಗಿ ಮೈದುಂಬಿ ಹರಿಯುತ್ತಿದ್ದು, ಜಲಪಾತದ ನೀರು ಪ್ರವಾಸಿಗರು ಚಲಿಸುವ ಮೆಟ್ಟಿಲುಗಳ ಮೇಲೆಯೇ ಧುಮುಕುತ್ತಿದೆ. ಚಿಕ್ಕಮಗಳೂರು ನಗರದ ರಸ್ತೆಗಳೂ ಕೂಡ ಜಲಾವೃತಗೊಂಡಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಗೆ ಈಗಾಗಲೇ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.&lt;/p&gt;&lt;h2&gt;ಸಾರ್ವಜನಿಕರಿಗೆ ಹವಾಮಾನ ಇಲಾಖೆಯ ಪ್ರಮುಖ ಸೂಚನೆಗಳು&lt;/h2&gt;&lt;ul&gt; &lt;li&gt;ಮಳೆಯ ಸಮಯದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವುದರಿಂದ ಹಳೆಯ ಮರಗಳು, ಒಣಗಿದ ರೆಂಬೆಗಳು ಹಾಗೂ ವಿದ್ಯುತ್ ಕಂಬಗಳು ಉರುಳಿ ಬೀಳುವ ಅಪಾಯ ಹೆಚ್ಚಿರುತ್ತದೆ.&lt;/li&gt; &lt;li&gt;ಸಾರ್ವಜನಿಕರು, ವಾಹನ ಸವಾರರು ಹಾಗೂ ತೋಟದ ಕಾರ್ಮಿಕರು ಮಳೆ ಬರುವಾಗ ಯಾವುದೇ ಕಾರಣಕ್ಕೂ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು.&lt;/li&gt; &lt;li&gt;ತೀವ್ರವಾದ ಗುಡುಗು ಮತ್ತು ಸಿಡಿಲು ಇರುವುದರಿಂದ ಇಲೆಕ್ಟ್ರಾನಿಕ್ ಉಪಕರಣಗಳ ಬಳಕೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು.&lt;/li&gt;&lt;/ul&gt;]]></content:encoded>
            <category>chikkamagalur</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-weather-forecast-bengaluru-hailstorm-warning-imd-rain-alert-gdp/articleshow-knq9a02"/>
        </item>
        <item>
            <title><![CDATA[ಚಿಕ್ಕಮಗಳೂರಿನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಬೀದಿ ಕಾಳಗ: ನಾಲ್ವರ ವಿರುದ್ಧ FIR ದಾಖಲಿಸಿದ ಪೊಲೀಸರು!]]></title>
            <link>https://kannada.asianetnews.com/karnataka-districts/chikkamagaluru-bjp-congress-clash-ct-ravi-road-inspection-fir-on-santosh-kotian-and-other-three-sat/articleshow-mi2ipac</link>
            <guid isPermaLink="true">https://kannada.asianetnews.com/karnataka-districts/chikkamagaluru-bjp-congress-clash-ct-ravi-road-inspection-fir-on-santosh-kotian-and-other-three-sat/articleshow-mi2ipac</guid>
            <pubDate>Fri, 22 May 2026 15:00:46 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನಲ್ಲಿ ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ, ಪೊಲೀಸರು ಎರಡೂ ಪಕ್ಷಗಳ ನಾಲ್ವರು ಕಾರ್ಯಕರ್ತರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks7g6c3k7zmb94n4f47yhqf5,imgname-chikkamagaluru-santosh-kotian-1779442069619.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ 22): ಚಿ&lt;/strong&gt;ಕ್ಕಮಗಳೂರು ನಗರದಲ್ಲಿ ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಎರಡೂ ಪಕ್ಷಗಳ ನಾಲ್ವರು ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.&lt;/p&gt;&lt;p&gt;&lt;strong&gt;ಎರಡು ಪಕ್ಷದ ನಾಲ್ವರು ಕಾರ್ಯಕರ್ತರ ಮೇಲೆ&zwnj; ಕೇಸ್ :&lt;/strong&gt;&lt;/p&gt;&lt;p&gt;ನಿನ್ನೆ ಬೆಳಿಗ್ಗೆ ಚಿಕ್ಕಮಗಳೂರು ನಗರದ ರಾಂಪುರ ರಸ್ತೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆಗೆ ಮಾಜಿ ಸಚಿವ ಸಿ.ಟಿ&zwnj; ರವಿತೆರಳಿದ್ದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ, ಬಳಿಕ ಅದು ತಳ್ಳಾಟ-ಹೊಡೆದಾಟದ ಮಟ್ಟಿಗೆ ಏರಿಕೆಯಾದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪೊಲೀಸರು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಆರೋಪದಡಿ ಸುಮೋಟೋ ಎಫ್&zwnj;ಐಆರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ರಾಜೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಾದ ಹೇಮಂತ್ ಮತ್ತು ಕೌಶಿಕ್ ಮೇಲೂ ಕೇಸ್ ದಾಖಲಾಗಿದೆ.&lt;/p&gt;&lt;h2&gt;&lt;strong&gt;ಕ್ಷೇತ್ರ ತೀವ್ರ ಚರ್ಚೆಗೆ ಗ್ರಾಸವಾದ ಘಟನೆ :&lt;/strong&gt;&lt;/h2&gt;&lt;p&gt;ಪೊಲೀಸರು ಎರಡೂ ಪಕ್ಷಗಳ ಕಾರ್ಯಕರ್ತರ ವಿರುದ್ಧ ಸಮಾನ ರೀತಿಯಲ್ಲಿ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಗಲಾಟೆ ನಡೆದ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.ಈ ಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಸಿ.ಟಿ ರವಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.ಮಾಜಿ ಸಚಿವರಿಗೆಲೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಕುರಿತು ಮುಖ್ಯಮಂತ್ರಿ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.ಘಟನೆ ಸಂಬಂಧ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣ ಮತ್ತಷ್ಟು ರಾಜಕೀಯ ಸ್ವರೂಪ ಪಡೆಯುವ ಸಾಧ್ಯತೆ ಇದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-bjp-congress-clash-ct-ravi-road-inspection-fir-on-santosh-kotian-and-other-three-sat/articleshow-mi2ipac"/>
        </item>
        <item>
            <title><![CDATA[ದಾಳಿಕೋರರ ಕೇಸ್‌ ವಾಪಸ್ ಮೂಲಕ ಸರ್ಕಾರ ಯಾವ ಸಂದೇಶ ನೀಡುತ್ತಿದೆ: ಸಿ.ಟಿ.ರವಿ ಪ್ರಶ್ನೆ]]></title>
            <link>https://kannada.asianetnews.com/karnataka-districts/ct-ravi-slams-karnataka-government-case-withdrawal-gvd/articleshow-p8ardhw</link>
            <guid isPermaLink="true">https://kannada.asianetnews.com/karnataka-districts/ct-ravi-slams-karnataka-government-case-withdrawal-gvd/articleshow-p8ardhw</guid>
            <pubDate>Sun, 24 May 2026 20:56:42 +0530</pubDate>
            <description><![CDATA[&lt;p&gt;ಭಗವಂತ ಖೂಬಾ ಅವರ ಮೇಲೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದವರ ಕೇಸ್ ವಾಪಸ್ ಪಡೆದು ಸರ್ಕಾರ ಏನು ಸಂದೇಶ ನೀಡುತ್ತಿದೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jg16hckjxj54xagpmkzcayw3,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.24):&lt;/strong&gt; ಕಲಬುರಗಿಯ ಆಳಂದದಲ್ಲಿ ಸಂಸದರು, ಜಿಲ್ಲಾ ಪೊಲೀಸ್&zwnj; ವರಿಷ್ಠಾಧಿಕಾರಿ ಹಾಗೂ ಪೊಲೀಸರ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಈ ಕಾಂಗ್ರೆಸ್&zwnj; ಸರ್ಕಾರ ಸಮಾಜಕ್ಕೆ ಯಾವ ಸಂದೇಶ ನೀಡುವುದಕ್ಕೆ ಹೊರಟಿದೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಆಳಂದದ ರಾಘವ ಚೈತ್ಯನ್ಯರ ಬೃಂದಾವನದಲ್ಲಿ ಪೂಜೆಗೆ ಹೋದ ವೇಳೆ ಪೊಲೀಸ್&zwnj; ಅಧಿಕಾರಿ, ಆಗಿನ ಸಂಸದ ಭಗವಂತ ಖೂಬಾ ಅವರ ಮೇಲೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದವರ ಕೇಸ್ ವಾಪಸ್ ಪಡೆದು ಸರ್ಕಾರ ಏನು ಸಂದೇಶ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಒಂದು ಸಮುದಾಯಕ್ಕೆ ನೀವು ಏನು ಬೇಕಾದರೂ ಮಾಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ನೀತಿಯನ್ನು ಕಾಂಗ್ರೆಸ್&zwnj; ಅನು ಸರಿಸುತ್ತಿದೆ. ಕಮ್ಯುನಲ್- ಮತ್ತು ಕ್ರಿಮಿನಲ್ ಗಳಿಗೆ ರಕ್ಷಣೆ ನೀಡುವ ಕಾಂಗ್ರೆಸ್ ನೀತಿಯು ಸಮಾಜ ಘಾತುಕ ಮತ್ತು ಅಪಾಯಕಾರಿ ನೀತಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆದಿದ್ದರೆ ಪ್ರಶ್ನೆ ಮಾಡುತ್ತಿರಲಿಲ್ಲ.&lt;/p&gt;&lt;h2&gt;&lt;strong&gt;ರಾಷ್ಟ್ರಘಾತಕ ನೀತಿ&lt;/strong&gt;&lt;/h2&gt;&lt;p&gt;ಯಾವುದೇ ಚಳುವಳಿ ಕೇಸ್ ವಾಪಸ್ ಪಡೆಯುವುದು ಬೇರೆ, ಗಂಭೀರ ಪ್ರಕರಣದಲ್ಲಿ ಬೆಂಕಿ ಹಾಕಿ, ದೊಣ್ಣೆ ಹಿಡಿದ ಕೇಸ್ ಗಳನ್ನು ವಾಪಾಸ್&zwnj; ಪಡೆಯುವುದು ಬೇರೆ. ರಾಜ್ಯ ಸರ್ಕಾರ ನೆಪ ಮಾತ್ರಕ್ಕೆ ಹೋರಾಟಗಾರರ ಮೇಲಿನ ಕೇಸ್&zwnj; ವಾಪಾಸ್&zwnj; ಪಡೆದಿದೆ. ಇದು ಸರ್ಕಾರದ ಸಮಾಜ ಘಾತುಕ ಹಾಗೂ ರಾಷ್ಟ್ರಘಾತಕ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ತನ್ನ ನಿರ್ಣಯ ಹಿಂಪಡೆಯಬೇಕು. ಇಲ್ಲವಾದರೆ, ಈ ಬಗ್ಗೆ ನ್ಯಾಯಾಲಯದಲ್ಲಿ ಮತ್ತು ಸದನದಲ್ಲಿಯೂ ಪ್ರಶ್ನಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ct-ravi-slams-karnataka-government-case-withdrawal-gvd/articleshow-p8ardhw"/>
        </item>
        <item>
            <title><![CDATA[ಈ ಜಿಲ್ಲೆಯಲ್ಲಿ ಈ ವರ್ಷ 80ಕ್ಕೂ ಅಧಿಕ ಸರ್ಕಾರಿ ಶಾಲೆ ಬಂದ್‌? ಕಾರಣವೇನು?]]></title>
            <link>https://kannada.asianetnews.com/education/chikkamagaluru-government-schools-merger-kps-education-news-gvd/articleshow-r1dbei7</link>
            <guid isPermaLink="true">https://kannada.asianetnews.com/education/chikkamagaluru-government-schools-merger-kps-education-news-gvd/articleshow-r1dbei7</guid>
            <pubDate>Mon, 25 May 2026 19:53:23 +0530</pubDate>
            <description><![CDATA[&lt;p&gt;ಜಿಲ್ಲೆಯಲ್ಲಿ ಎಷ್ಟು ಶಾಲೆಗಳನ್ನು ಕೆಪಿಎಸ್&zwnj; ಶಾಲೆಗಳಾಗಿ ಪರಿವರ್ತನೆ ಮಾಡಬಹುದು. ಸಮೀಪದ ಎಷ್ಟು ಶಾಲೆಗಳನ್ನು ಕೆಪಿಎಸ್&zwnj; ಶಾಲೆಗಳಿಗೆ ವಿಲೀನಗೊಳಿಸಬಹುದು ಎಂಬ ಬಗ್ಗೆ ಈಗಾಗಲೇ ನೀಲ ನಕ್ಷೆ ಸಿದ್ಧಪಡಿಸಿ ಕೊಳ್ಳಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jfkehqq83z2nqqp2hp23bqvf,imgname-whatsapp-image-2024-12-21-at-07.14.17--1-.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಶ್ವನಾಥ ಮಲೇಬೆನ್ನೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಮೇ.25):&lt;/strong&gt; ಇನ್ನೇನು ಕೆಲವೇ ದಿನಗಳಲ್ಲಿ ಶಾಲೆಗಳು ಪುನರ್&zwnj; ಆರಂಭಗೊಳ್ಳಲಿರುವ ಪ್ರಸಕ್ತ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸುಮಾರು 80ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಶಿಕ್ಷಣ ಇಲಾಖೆ ಶಾಶ್ವತವಾಗಿ ಮುಚ್ಚಲು ಸಿದ್ಧತೆ ಮಾಡಿಕೊಂಡಿದೆ.&lt;/p&gt;&lt;p&gt;ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ 15 ಕರ್ನಾಟಕ ಪಬ್ಲಿಕ್&zwnj; ಶಾಲೆಗಳನ್ನು (ಕೆಪಿಎಸ್&zwnj;) 2026-27ನೇ ಸಾಲಿನಲ್ಲಿ ಹೊಸದಾಗಿ ಆರಂಭಿಸಲು ಈಗಾಗಲೇ ಅನುಮತಿ ಸಿಕ್ಕಿದೆ. ಈ ಒಂದೊಂದು ಕೆಪಿಎಸ್&zwnj; ಶಾಲೆಗಳಿಗೂ ಸುತ್ತಮುತ್ತಲ ಐದಾರು ಕಿ.ಮೀ. ವ್ಯಾಪ್ತಿಯ ಕನಿಷ್ಠ 5 ರಿಂದ ಗರಿಷ್ಠ 10 ಶಾಲೆಗಳ ವಿಲೀನಕ್ಕೆ ಸದ್ದಿಲ್ಲದೆ ಪ್ರಕ್ರಿಯೆ ಆರಂಭವಾಗಿದೆ. ಇದರಿಂದ ಮುಂಬ ರುವ ಶೈಕ್ಷಣಿಕ ಸಾಲಿನಲ್ಲಿ ಕನಿಷ್ಠ 70 ರಿಂದ 80 ಸರ್ಕಾರಿ ಶಾಲೆಗಳು ಕೆಪಿಎಸ್&zwnj; ಶಾಲೆಗಳಲ್ಲಿ ವಿಲೀನವಾಗುವ ಮೂಲಕ ಬಂದ್&zwnj; ಆಗಲಿವೆ.&lt;/p&gt;&lt;p&gt;ಅಷ್ಟೇ ಅಲ್ಲದೇ ಈಗಾಗಲೇ ಜಿಲ್ಲೆಯಲ್ಲಿ ಎಷ್ಟು ಶಾಲೆಗಳನ್ನು ಕೆಪಿಎಸ್&zwnj; ಶಾಲೆಗಳಾಗಿ ಪರಿವರ್ತನೆ ಮಾಡಬಹುದು. ಸಮೀಪದ ಎಷ್ಟು ಶಾಲೆಗಳನ್ನು ಕೆಪಿಎಸ್&zwnj; ಶಾಲೆಗಳಿಗೆ ವಿಲೀನಗೊಳಿಸಬಹುದು ಎಂಬ ಬಗ್ಗೆ ಈಗಾಗಲೇ ನೀಲ ನಕ್ಷೆ ಸಿದ್ಧಪಡಿಸಿ ಕೊಳ್ಳಲಾಗಿದೆ. ಪ್ರಸಕ್ತ ವರ್ಷದಲ್ಲಿ ಒಂದಿಷ್ಟು ಸಂಖ್ಯೆ ಶಾಲೆಗಳು, ಮುಂದಿನ ವರ್ಷ ಮತ್ತಷ್ಟು ಶಾಲೆಗಳು ಹೀಗೆ, ಹಂತ ಹಂತ ವಾಗಿ ವಿಲೀನಗೊಳಿಸಲು ಮೊದಲ ಹಂತದ ತಯಾರಿ ಮಾಡಲಾಗಿದೆ ಎಂಬುದನ್ನು ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;2025-26ರಲ್ಲಿ 21 ಶಾಲೆ ಬಂದ್&zwnj;&lt;/strong&gt;&lt;/p&gt;&lt;p&gt;ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2025-26ನೇ ಸಾಲಿನಲ್ಲಿ ಬೀರೂರು ಬ್ಲಾಕ್&zwnj;ನ 3, ಚಿಕ್ಕಮಗಳೂರಿನ 9, ಕಡೂರಿನ 6, ಮೂಡಿಗೆರೆ ಹಾಗೂ ತರೀಕೆರೆ ಬ್ಲಾಕ್&zwnj; ತಲಾ 2 ಶಾಲೆಯಂತೆ ಒಟ್ಟು 21 ಶಾಲೆಗಳನ್ನು ಅಧಿಕೃತವಾಗಿ ಬಂದ್&zwnj; ಮಾಡಲಾಗಿದೆ. ಈ ಪೈಕಿ 19 ಶಾಲೆಗಳು 1 ರಿಂದ 5ನೇ ತರಗತಿ ಶಾಲೆಗಳಾಗಿವೆ. ಉಳಿದ ಎರಡು 1 ರಿಂದ 7ನೇ ತರಗತಿ ಶಾಲೆಗಳಾಗಿವೆ.&lt;/p&gt;&lt;p&gt;&lt;strong&gt;ಈವರೆಗೆ ಜಿಲ್ಲೆಯ 292 ಶಾಲೆ ಬಂದ್&lt;/strong&gt;&lt;/p&gt;&lt;p&gt;ಈವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 20 ರಿಂದ 25 ಶಾಲೆಳನ್ನು ಬಂದ್&zwnj; ಮಾಡಲಾಗುತ್ತಿದ್ದು, ಈವರೆಗೆ ಬರೋಬ್ಬರಿ 292 ಶಾಲೆಗಳನ್ನು ಅಧಿಕೃತವಾಗಿ ಬಂದ್&zwnj; ಮಾಡಲಾಗಿದೆ. ಈ ಪೈಕಿ ಮೂಡಿಗೆರೆ ತಾಲೂಕಿನಲ್ಲೆ ಅತಿ ಹೆಚ್ಚು 68 ಶಾಲೆಗಳನ್ನು ಬಂದ್&zwnj; ಮಾಡಲಾಗಿದೆ. ಉಳಿದಂತೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ 52 ಶಾಲೆ, ಬೀರೂರು 26 ಶಾಲೆ, ಕಡೂರು 33 ಶಾಲೆ, ಕೊಪ್ಪ 29 ಶಾಲೆ, ಎನ್&zwnj;.ಆರ್&zwnj;,ಪುರ 26 ಶಾಲೆ, ಶೃಂಗೇರಿ 30 ಶಾಲೆ ಹಾಗೂ ತರೀಕೆರೆ ತಾಲೂಕಿನಲ್ಲಿ 28 ಶಾಲೆಗಳನ್ನು ಬಂದ್ ಮಾಡಲಾಗಿದೆ.&lt;/p&gt;&lt;p&gt;&lt;strong&gt;ಕೆಲವೇ ಶಾಲೆ ಪುನಾರಂಭ&lt;/strong&gt;&lt;/p&gt;&lt;p&gt;ಶಾಲೆಗಳು ಬಂದ್ ಮಾಡಿದ ಪೈಕಿ ಈವರೆಗೆ ಕೆಲವು ಶಾಲೆಗಳನ್ನು ಪುನರ್ ಆರಂಭಿಸುವುದಕ್ಕೂ ಕ್ರಮ ವಹಿಸಲಾಗಿದೆ. ಆದರೆ, ಆ ಸಂಖ್ಯೆ ಬಂದ್&zwnj; ಆಗಿರುವ ಸಂಖ್ಯೆಗೆ ಹೋಲಿಕೆ ಮಾಡಿದರೆ ತೀರಾ ಕಡಿಮೆ ಇದೆ. 2021-22ರಲ್ಲಿ 10 ಶಾಲೆಗಳನ್ನು ಪುನರ್&zwnj; ಆರಂಭಿಸಲಾಗಿದೆ. ಆ ನಂತರ ಆರಂಭಗೊಂಡ ಶಾಲೆಗಳ ವಿವರ ಲಭ್ಯವಿಲ್ಲ.&lt;/p&gt;&lt;h2&gt;&lt;strong&gt;ಈಗಾಗಲೇ ಹುತ್ತಾರು ಕಿ.ಮೀ ವಿದ್ಯಾರ್ಥಿಗಳು ಓಡಾಟ&lt;/strong&gt;&lt;/h2&gt;&lt;p&gt;ಈಗಾಗಲೇ ಮಲೆನಾಡು ಭಾಗದ ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಹತ್ತಾರು ಕಿ.ಮೀ ದೂರ ಬಸ್&zwnj;, ಕಾಲ್ನಡಿಗೆ ಮೂಲಕ ಆಗಮಿಸುವ ಪರಿಸ್ಥಿತಿ ಇದೆ. ಕೆಪಿಎಸ್&zwnj; ಶಾಲೆ ಹೆಸರಿನಲ್ಲಿ ಶಾಲೆಗಳನ್ನು ವಿಲೀನ ಮಾಡಿದರೆ ಆ ಮಕ್ಕಳಿಗೆ ಶಾಲೆ ಮತ್ತಷ್ಟು ದೂರವಾಗಲಿದೆ. ಆಗ ಆ ಮಗು ಶಾಲೆ ಬಿಡುವ ಸಾಧ್ಯತೆ ಇದೆ. ಕೆಪಿಎಸ್&zwnj; ಶಾಲೆಗೆ ಮಕ್ಕಳು ಬರುವುದಕ್ಕೆ ಬಸ್&zwnj; ವ್ಯವಸ್ಥೆ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕೆಲವು ಪ್ರದೇಶಗಳಿಗೆ ಬಸ್&zwnj; ಹೋಗಲು ರಸ್ತೆಗಳೇ ಇಲ್ಲ. ಬಸ್&zwnj; ಇಲ್ಲದ ಹಳ್ಳಿಗಳಿಂದ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಆ ಮಕ್ಕಳ ಪರಿಸ್ಥಿತಿ ಏನು ಎಂದು ಚಿಕ್ಕಮಗಳೂರು ಎಐಡಿಎಸ್ಓ ಜಿಲ್ಲಾ ಸಂಚಾಲಕಿ ಚೈತ್ರಾ ಪ್ರಶ್ನಿಸಿದ್ದಾರೆ.&lt;/p&gt;&lt;p&gt;ಕನ್ನಡ ಮಾಧ್ಯಮ ಮಾತ್ರ ಇರುವ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಅಲ್ಲಿ ಮಾತ್ರ ಸಮಸ್ಯೆ ಎದುರಾಗುತ್ತಿದೆ. ವಿಲೀನ ಮಾಡುವ ಶಾಲೆಗಳಿಂದ ಮಕ್ಕಳು ಕೆಪಿಎಸ್&zwnj; ಶಾಲೆಗೆ ಬರುವುದಕ್ಕೆ ಬಸ್&zwnj; ವ್ಯವಸ್ಥೆ ಸಹ ಮಾಡಲಾಗುತ್ತದೆ. ಕೆಪಿಎಸ್&zwnj; ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವುದಕ್ಕೆ ಸರ್ಕಾರ ಚಿಂತನೆ ಮಾಡಿದೆ.- ತಿಮ್ಮರಾಜು, ಉಪ ನಿರ್ದೇಶಕ, ಶಾಲಾ ಶಿಕ್ಷಣ ಇಲಾಖೆ ಚಿಕ್ಕಮಗಳೂರು&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/chikkamagaluru-government-schools-merger-kps-education-news-gvd/articleshow-r1dbei7"/>
        </item>
        <item>
            <title><![CDATA[ಯಾವ ದೇವರ ಮುಂದೆ ಬೇಕಾದರೂ ಸತ್ಯ ಮಾಡುತ್ತೇನೆ: ಸಿ.ಟಿ.ರವಿ ಹೀಗೆ ಹೇಳಿದ್ದು ಯಾಕೆ?]]></title>
            <link>https://kannada.asianetnews.com/karnataka-districts/bjp-mlc-ct-ravi-targets-congress-over-development-works-gvd/articleshow-s4w15lb</link>
            <guid isPermaLink="true">https://kannada.asianetnews.com/karnataka-districts/bjp-mlc-ct-ravi-targets-congress-over-development-works-gvd/articleshow-s4w15lb</guid>
            <pubDate>Fri, 22 May 2026 18:55:50 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಅನುಷ್ಠಾನಗೊಳ್ಳುತ್ತಿರುವ ಶೇ.95 ರಷ್ಟು ಕಾಮಗಾರಿಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಾಗಿವೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k6n1r2yb9cj970w34ptevx1b,imgname-ct-ravi-1759495588811.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಮೇ.22): &lt;/strong&gt;ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಅನುಷ್ಠಾನಗೊಳ್ಳುತ್ತಿರುವ ಶೇ.95 ರಷ್ಟು ಕಾಮಗಾರಿಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಾಗಿವೆ. ಆ ಕಾಮಗಾರಿಗಳನ್ನು ಅದಲು, ಬದಲು ಮಾಡಿ ಶಂಕುಸ್ಥಾಪನೆ ಮಾಡುವ ಕೆಲಸ ಕಾಂಗ್ರೆಸ್&zwnj; ಶಾಸಕರು ಮಾಡುತ್ತಿದ್ದಾರೆ. ಈ ಬಗ್ಗೆ ಯಾವ ದೇವರ ಮುಂದೆ ಬೇಕಾದರೂ ಸತ್ಯ ಮಾಡುತ್ತೇನೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ ಕ್ಷೇತ್ರದ ಯಾವ ಗ್ರಾಮಗಳಿಗೆ ಎಷ್ಟು ಅನುದಾನ ನೀಡಿದ್ದೇನೆ ಎಂಬ ಪಟ್ಟಿ ನೀಡುತ್ತೇನೆ. ಶಾಸಕ ತಮ್ಮಯ್ಯ, ಸದ್ಯ ಉದ್ಘಾಟಿಸುತ್ತಿರುವ ಕಾಮಗಾರಿ ಬಿಜೆಪಿ ಅವಧಿಯಲ್ಲಿ ಮಂಜೂರಾದ ಕಾಮಗಾರಿ. ಈ ಬಗ್ಗೆ ಬೇಕಾದರೆ, ಸರಸ್ವತಿ ದೇವಸ್ಥಾನದಲ್ಲಿ ಪ್ರಮಾಣ ಮಾಡುತ್ತೇನೆ. ತಾವು ಮಂಜೂರು ಮಾಡಿದ ಕಾಮಗಾರಿಗಳು ಆಗಿದ್ದರೆ, ಬಂದು ಅವರು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.&lt;/p&gt;&lt;p&gt;2018 ರಿಂದ 23ರ ಅವಧಿಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸೂಪರ್&zwnj; ಸ್ಪೆಷಾಲಿಟಿ ಆಸ್ಪತ್ರೆ, ಬಹುಗ್ರಾಮ ಕುಡಿ ಯುವ ನೀರಿನ ಯೋಜನೆ, ಕೆರೆ ತುಂಬಿಸುವ ಯೋಜನೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಒಟ್ಟು ₹5,857 ಕೋಟಿ ಅನುದಾನ ತೆಗೆದುಕೊಂಡು ಬರಲಾಗಿತ್ತು. 2023ರ ನಂತರ ಬಂದ ಕಾಂಗ್ರೆಸ್&zwnj; ಸರ್ಕಾರ ಈವರೆಗೆ ₹50 ರಿಂದ 55 ಕೋಟಿ ಅನುದಾನ ನೀಡಿದೆ. ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ ಕಾಮಗಾರಿಗಳನ್ನು ಈಗಿನ ಶಾಸಕರು ಅದಲು ಬದಲು ಮಾಡಿ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ಈ ಸತ್ಯ ಜನರಿಗೆ ತಿಳಿಸುವ ಉದ್ದೇಶದಿಂದ ಕಾಮಗಾರಿ ಸ್ಥಳಕ್ಕೆ ಆಗಮಿಸಿದ್ದೇನೆ ಎಂದರು.&lt;/p&gt;&lt;p&gt;&lt;strong&gt;ಕಾಂಗ್ರೆಸ್&zwnj; ಸರ್ಕಾರದ ವಿಳಂಬ ನೀತಿಯಿಂದ ತಡ&lt;/strong&gt;&lt;/p&gt;&lt;p&gt;ಲೋಕೋಪಯೋಗಿ ಇಲಾಖೆಯಿಂದ ₹210 ಕೋಟಿ ವಿಶೇಷ ಅನುದಾನವನ್ನು 2022ರಲ್ಲಿ ಮಂಜೂರು ಮಾಡಿಸಲಾಗಿತ್ತು. ಈ ಪೈಕಿ ಈ ರಾಂಪುರ ರಸ್ತೆಯೂ ಒಂದಾಗಿದೆ. ಈ ರಸ್ತೆಗೆ ₹8 ಕೋಟಿ ಮೀಸಲಿಡಲಾಗಿತ್ತು. ಆದರೆ, 2023ರ ಮೇ ನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್&zwnj; ಸರ್ಕಾರ ಆರಂಭಿಸದ ಕಾಮಗಾರಿ ತಡೆ ಹಿಡಿಯುವ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈ ರಾಂಪುರ ರಸ್ತೆ ಕಾಮಗಾರಿಗೆ ಅಷ್ಟರಲ್ಲಿ ಟೆಂಡರ್ ಆಗಿತ್ತು, ಆದರೆ, ಕಾರ್ಯಾದೇಶ ನೀಡಿರಲಿಲ್ಲ. 2024ರದ ಜುಲೈ ನಲ್ಲಿ ಕಾರ್ಯಾದೇಶ ನೀಡಿದರು. 10 ಮೀಟರ್&zwnj; ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ರಸ್ತೆಯಲ್ಲಿ ವಿದ್ಯುತ್&zwnj; ಕಂಬ ಮತ್ತು ಮರ ಅಡ್ಡವಾದ ಹಿನ್ನೆಲೆಯಲ್ಲಿ ವಿದ್ಯುತ್&zwnj; ಕಂಬ ಸ್ಥಳಾಂತರಕ್ಕೆ ಮತ್ತು ಮರ ತೆರವಿಗೆ ಕಳೆದ 2026ರ ಜನವರಿ 29ರಲ್ಲಿ ಕಾರ್ಯದೇಶ ನೀಡಲಾಗಿದೆ. ಹೀಗಾಗಿ, ಕಾಮಗಾರಿ ವಿಳಂಬವಾಗಿದೆ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಅಧಿಕಾರ ದರ್ಪ ಹೆಚ್ಚು ದಿನ ನಡೆಯಲ್ಲ&lt;/strong&gt;&lt;/p&gt;&lt;p&gt;ಬಹಳ ದಿನ ಈ ಅಧಿಕಾರದ ದರ್ಪ ನಡೆಯುವುದಿಲ್ಲ. ದರ್ಪ ತೋರಿಸಿದವರು ಹೆಚ್ಚು ದಿನ ಉಳಿಯುವುದಿಲ್ಲ. ನಾನು ಕಾಣದಿರುವ ಅಧಿಕಾರವಲ್ಲ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಮಂತ್ರಿಯಾಗಿ, ಈಗ ವಿಧಾನಪರಿಷತ್&zwnj; ಸದಸ್ಯನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬೇರೆ ಬೇರೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿದ್ದೇನೆ ಎಂದರು.&lt;/p&gt;&lt;p&gt;&lt;strong&gt;ಹೋದಲಿ, ಬಂದಲ್ಲಿ ಧಿಕ್ಕಾರ ಕೂಗಿಸುವುದು ಕಷ್ಟವಲ್ಲ&lt;/strong&gt;&lt;/p&gt;&lt;p&gt;ಅಭಿವೃದ್ಧಿ ವಿಚಾರದಲ್ಲಿ ಚಿಲ್ಲರೆ ರಾಜಕಾರಣ ಮಾಡಬಾರದು ಎಂದು ಸುಮ್ಮನಿದ್ದೇವೆ. ಕಾಂಗ್ರೆಸ್&zwnj; ಶಾಸಕರು ಹೋದಲ್ಲಿ, ಬಂದಲ್ಲಿ ಧಿಕ್ಕಾರ ಕೂಗಿಸುವುದು ಕಷ್ಟದ ಕೆಲಸವಲ್ಲ. ಸಿ.ಟಿ.ರವಿ ಖೋಟಾ ನೋಟು ಚಲಾವಣೆ ರಾಜಕಾರಣಿ ಅಲ್ಲ. ಖೋಟಾ ನೋಟ್&zwnj;ನಿಂದ ಗುಬ್ಬಿ ಹಳ್ಳಿಯಲ್ಲಿ ಅಮಾಯಕನ ಸಾವಿಗೆ ಕಾರಣ ಯಾರು ಎಂಬುದು ಜಗತ್ತಿಗೆ ಗೊತ್ತಿದೆ. ನಕಲಿ ಮದ್ಯ ಪೂರೈಕೆ ಮಾಡುತ್ತಿರುವ ಕಿಂಗ್&zwnj; ಪಿನ್&zwnj;ಗೆ ಸಹಕಾರ ನೀಡಿ, ಬಡವರ ಮನೆ ಹಾಳು ಮಾಡುತ್ತಿರುವ ಶಾಸಕ ನಾನು ಅಲ್ಲ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;h2&gt;&lt;strong&gt;ಯಾರ ಹೆಸರಿನಲ್ಲಿ ಕಾಮಗಾರಿ ಪಟ್ಟಿ ಬಿಡುಗಡೆ&lt;/strong&gt;&lt;/h2&gt;&lt;p&gt;ಕ್ಷೇತ್ರದಲ್ಲಿ ಯಾರು, ಯಾರ ಹೆಸರಿನಲ್ಲಿ ಗುತ್ತಿಗೆ ಪಡೆದು ಕಾಮಗಾರಿ ಮಾಡುತ್ತಿದ್ದಾರೆ ಎಂಬ ಬಗ್ಗೆ ಪಟ್ಟಿ ಬಿಡುಗಡೆ ಮಾಡು ತ್ತೇನೆ. ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ ಹಣದಲ್ಲಿ ಇವರಿಗೆ ಕಮಿಷನ್&zwnj; ಸಿಕ್ಕಿದ್ದು, ಅದರಲ್ಲಿ ಮಜಾ ಮಾಡುತ್ತಿದ್ದಾರೆ. 20 ವರ್ಷದ ಶಾಸಕರ ಅವಧಿಯಲ್ಲಿ ಒಂದು ಬಾರ್&zwnj; ಅಂಗಡಿ ತೆರೆಯಲಿಲ್ಲ. ಸಂಬಂಧಿಕರ ಹೆಸರಿನಲ್ಲೂ ಬಾರ್&zwnj; ತೆರೆದಿಲ್ಲ ಎಂದರು.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bjp-mlc-ct-ravi-targets-congress-over-development-works-gvd/articleshow-s4w15lb"/>
        </item>
        <item>
            <title><![CDATA[ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’: ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!]]></title>
            <link>https://kannada.asianetnews.com/gallery/karnataka-districts/chikkamagaluru-mullayanagiri-mini-himalaya-pre-monsoon-fog-tourist-rush-sat-tgb8llb</link>
            <guid isPermaLink="true">https://kannada.asianetnews.com/gallery/karnataka-districts/chikkamagaluru-mullayanagiri-mini-himalaya-pre-monsoon-fog-tourist-rush-sat-tgb8llb</guid>
            <pubDate>Sun, 24 May 2026 09:13:05 +0530</pubDate>
            <description><![CDATA[ಮುಂಗಾರು ಪೂರ್ವ ಮಳೆಯಿಂದಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶಿಖರವು ದಟ್ಟವಾದ ಮಂಜಿನಿಂದ ಆವೃತವಾಗಿದ್ದು, 'ಮಿನಿ ಹಿಮಾಲಯ'ದಂತೆ ಕಂಗೊಳಿಸುತ್ತಿದೆ. ಈ ಸ್ವರ್ಗೀಯ ವಾತಾವರಣವು ವಾರಾಂತ್ಯದಲ್ಲಿ ಸಹಸ್ರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಅವರು ಈ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksc0yb7cd21q35e924g94vk7,imgname-mullayanagiri-mini-himalaya-1779593850092.jpg" type="image/jpeg" height="390" width="690"/>
            <content:encoded><![CDATA[ಮುಂಗಾರು ಪೂರ್ವ ಮಳೆಯಿಂದಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಶಿಖರವು ದಟ್ಟವಾದ ಮಂಜಿನಿಂದ ಆವೃತವಾಗಿದ್ದು, 'ಮಿನಿ ಹಿಮಾಲಯ'ದಂತೆ ಕಂಗೊಳಿಸುತ್ತಿದೆ. ಈ ಸ್ವರ್ಗೀಯ ವಾತಾವರಣವು ವಾರಾಂತ್ಯದಲ್ಲಿ ಸಹಸ್ರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಅವರು ಈ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.&lt;img&gt;&lt;p&gt;ಚಿಕ್ಕಮಗಳೂರು (ಮೇ 24): ಕಾಫಿ ನಾಡು ಚಿಕ್ಕಮಗಳೂರಿನ ಪ್ರಕೃತಿ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ (Pre-Monsoon) ಸಿಂಚನವಾಗುತ್ತಿದ್ದು, ಇದರ ಬೆನ್ನಲ್ಲೇ ಕರ್ನಾಟಕದ ಅತ್ಯುನ್ನತ ಪರ್ವತ ಶಿಖರವಾದ ಮುಳ್ಳಯ್ಯನಗಿರಿಯಲ್ಲಿ (Mullayanagiri) ಸ್ವರ್ಗೀಯ ವಾತಾವರಣ ನಿರ್ಮಾಣವಾಗಿದೆ. ಮುಂಗಾರು ಮಾರುತಗಳು ಅಧಿಕೃತವಾಗಿ ಪ್ರವೇಶಿಸುವ ಮುನ್ನವೇ ಇಲ್ಲಿ &lsquo;ಮಿನಿ ಹಿಮಾಲಯ&rsquo; ಸೃಷ್ಟಿಯಾಗಿದ್ದು, ಪ್ರಕೃತಿ ಪ್ರಿಯರ ಕಣ್ಣಿಗೆ ಹಬ್ಬವನ್ನು ಉಂಟುಮಾಡುತ್ತಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ (Chandradrona Hill Range) ಬೆಟ್ಟಗಳು ಸದ್ಯ ಸಂಪೂರ್ಣವಾಗಿ ಮಂಜಿನ ನಗರಿಯಾಗಿ ಮಾರ್ಪಟ್ಟಿವೆ. ಮುಳ್ಳಯ್ಯನಗಿರಿಯ ತುದಿಯಿಂದ ಹಿಡಿದು ಅದರ ಕೆಳಗಿನ ತಪ್ಪಲಿನವರೆಗೂ ದಟ್ಟವಾದ ಬಿಳಿ ಮಂಜಿನ ರಾಶಿ ಆವರಿಸಿಕೊಂಡಿದೆ. ಮುಂಜಾನೆ ಮತ್ತು ಸಂಜೆ ವೇಳೆ ಇಡೀ ಗಿರಿ ಸಾಲು ಹಸಿರು ಹೊದಿಕೆಯ ಮೇಲೆ ಬಿಳಿ ಮಂಜಿನ ಮುಸುಕು ಹೊದ್ದಂತೆ ಕಂಗೊಳಿಸುತ್ತಿದೆ. ಕ್ಷಣಾರ್ಧದಲ್ಲಿ ಮೋಡಗಳು ಬೆಟ್ಟವನ್ನು ಮರೆಮಾಡುವುದು, ಮತ್ತೊಂದು ಕ್ಷಣದಲ್ಲಿ ತಂಗಾಳಿಗೆ ಮಂಜು ಕರಗಿ ಹಸಿರು ಕಾಡು ಅನಾವರಣಗೊಳ್ಳುವ ಈ &lsquo;ಮಂಜು-ಮೋಡಗಳ&rsquo; ಆಟ ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುತ್ತಿದೆ.&lt;/p&gt;&lt;img&gt;&lt;p&gt;ವಾರಾಂತ್ಯದ (Weekend) ರಜಾದಿನಗಳ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾಫಿ ನಾಡಿಗೆ ಲಗ್ಗೆ ಇಡುತ್ತಿದ್ದಾರೆ. ಬೇಸಿಗೆಯ ದಗೆಯಿಂದ ಬೇಸತ್ತಿದ್ದ ಜನರಿಗೆ ಮುಳ್ಳಯ್ಯನಗಿರಿಯ ಕೂಲ್ ಕೂಲ್ ವಾತಾವರಣ ಮತ್ತು ತಣ್ಣನೆಯ ಕುಳಿರ್ಗಾಳಿ ಅದ್ಭುತ ನೆಮ್ಮದಿಯನ್ನು ನೀಡುತ್ತಿದೆ. ಪ್ರವಾಸಿಗರು ಈ ವಿಹಂಗಮ ನೋಟವನ್ನು ತಮ್ಮ ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ಸೆರೆಹಿಡಿಯುತ್ತಾ, ರೀಲ್ಸ್ ಹಾಗೂ ಸೆಲ್ಫಿಗಳನ್ನು ತೆಗೆದುಕೊಳ್ಳುತ್ತಾ ಸಂಭ್ರಮಿಸುತ್ತಿದ್ದಾರೆ.&lt;/p&gt;&lt;p&gt;'ಹಿಮಾಲಯಕ್ಕೆ ಹೋಗಲು ಸಾಧ್ಯವಾಗದವರು ಒಮ್ಮೆ ಈ ಸಮಯದಲ್ಲಿ ಮುಳ್ಳಯ್ಯನಗಿರಿಗೆ ಬಂದರೆ ಆ ಫೀಲ್ ಇಲ್ಲೇ ಸಿಗುತ್ತದೆ. ಮಂಜಿನ ಹನಿಗಳು ಮುಖಕ್ಕೆ ಮುತ್ತಿಕ್ಕುವ ಅನುಭವ ಅತ್ಯಂತ ರೋಮಾಂಚನಕಾರಿಯಾಗಿದೆ' ಎಂದು ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರೊಬ್ಬರು ತಮ್ಮ ಆನಂದವನ್ನು ಹಂಚಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಗಿರಿ ಪ್ರದೇಶದಲ್ಲಿ ಮಂಜಿನ ಸಾಂದ್ರತೆ ಹೆಚ್ಚಾಗಿರುವುದರಿಂದ ರಸ್ತೆಗಳಲ್ಲಿ ಮುನ್ನಡೆಯುವಾಗ ವಾಹನ ಸವಾರರಿಗೆ ಕಣ್ಣು ಹಾಯಿಸಿದಷ್ಟೂ ದಾರಿ ಕಾಣದ ಪರಿಸ್ಥಿತಿ ಇದೆ (Zero Visibility). ಹೀಗಾಗಿ ಕಡಿದಾದ ತಿರುವುಗಳಲ್ಲಿ ಚಲಿಸುವಾಗ ಹೆಡ್&zwnj;ಲೈಟ್&zwnj;ಗಳನ್ನು ಆನ್ ಮಾಡಿಕೊಂಡು, ಅತ್ಯಂತ ನಿಧಾನವಾಗಿ ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸ್ಥಳೀಯ ಪೊಲೀಸರು ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರವಾಸಿಗರಲ್ಲಿ ಮನವಿ ಮಾಡಿದೆ. ಮುಂಗಾರು ಆರಂಭಕ್ಕೆ ಮುನ್ನವೇ ಇಷ್ಟೊಂದು ಸುಂದರವಾಗಿ ಕಾಣುತ್ತಿರುವ ಕಾಫಿ ನಾಡಿನ ಗಿರಿಶಿಖರಗಳು, ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಕಳೆ ತರಲಿವೆ ಎನ್ನುವುದರಲ್ಲಿ ಸಂದೇಹವಿಲ್ಲ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chikkamagaluru-mullayanagiri-mini-himalaya-pre-monsoon-fog-tourist-rush-sat-tgb8llb"/>
        </item>
        <item>
            <title><![CDATA[ಕುದುರೆಮುಖದ ಹಸಿರು ದ್ವಾರ ಮುಕ್ತ; ಚಾರಣಿಗರಿಗೆ ಹೊಸ ಕರೆಯೋಲೆ, ಇಂದಿನಿಂದ ಅಧಿಕೃತ ಅನುಮತಿ]]></title>
            <link>https://kannada.asianetnews.com/gallery/travel/karnataka-tourism-kuduremukha-trek-allowed-official-permission-from-today-mrq-ygp7g0t</link>
            <guid isPermaLink="true">https://kannada.asianetnews.com/gallery/travel/karnataka-tourism-kuduremukha-trek-allowed-official-permission-from-today-mrq-ygp7g0t</guid>
            <pubDate>Mon, 01 Jun 2026 07:22:13 +0530</pubDate>
            <description><![CDATA[&lt;p&gt;ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್&zwnj;ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt0dks45gtjdfj310s2b4v4f,imgname-kuduremukha--1--1780278224005.jpg" type="image/jpeg" height="390" width="690"/>
            <content:encoded><![CDATA[&lt;p&gt;ಕುದುರೆಮುಖ ವನ್ಯಜೀವಿ ವಿಭಾಗದ ಪ್ರಮುಖ ಚಾರಣ ತಾಣಗಳಾದ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳಿಗೆ ಜೂ. 1ರಿಂದ ಚಾರಣಕ್ಕೆ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ಚಾರಣಿಗರು 'ಅರಣ್ಯ ವಿಹಾರ' ವೆಬ್&zwnj;ಸೈಟ್ ಮೂಲಕ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ.&lt;/p&gt;&lt;img&gt;&lt;p&gt;ಕಾರ್ಕಳ: ಪಶ್ಚಿಮ ಘಟ್ಟಗಳ ಸೊಬಗನ್ನು ಸವಿಯಲು ಕಾತರದಿಂದ ಕಾಯುತ್ತಿದ್ದ ಚಾರಣ ಆಸಕ್ತರಿಗೆ ಸಂತಸದ ಸುದ್ದಿ. ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಕುದುರೆಮುಖ, ಗಂಗಡಿಕಲ್, ನೇತ್ರಾವತಿ ಹಾಗೂ ಕುರಿಂಜಾಲ್ ಬೆಟ್ಟಗಳ ಚಾರಣಕ್ಕೆ ಅರಣ್ಯ ಇಲಾಖೆ ಜೂ. 1ರಿಂದ ಅಧಿಕೃತ ಅನುಮತಿ ನೀಡಿದೆ.&lt;/p&gt;&lt;img&gt;&lt;p&gt;ಅರಣ್ಯ ಇಲಾಖೆ ಪ್ರಕಟಣೆ ಪ್ರಕಾರ,ಈ ನಾಲ್ಕು ಪ್ರಮುಖ ಚಾರಣ ತಾಣಗಳಿಗೆ ಭೇಟಿ ನೀಡಲು ಬಯಸುವವರು ಕಡ್ಡಾಯವಾಗಿ &lsquo;ಅರಣ್ಯ ವಿಹಾರ&rsquo; ವೆಬ್&zwnj;ಸೈಟ್ ಮೂಲಕ ಆನ್&zwnj;ಲೈನ್&zwnj;ನಲ್ಲಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಪ್ರಮಾಣಿತ ಕಾರ್ಯವಿಧಾನ (ಎಸ್&zwnj;ಒಪಿ) ಅನುಸಾರ ಚಾರಣ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಹಾಗೂ ಚಾರಣಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.&lt;/p&gt;&lt;img&gt;&lt;p&gt;ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್&zwnj;ಒ ಶುವರಾಮ್ ಬಾಬು ಅವರು ಮಾಹಿತಿ ನೀಡಿ, ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 300 ಮಂದಿ ಸ್ಥಳೀಯ ಗೈಡ್&zwnj;ಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಗೈಡ್&zwnj;ಗಳಿಗೆ ವಾಕಿಟಾಕಿ, ಪ್ರಥಮ ಚಿಕಿತ್ಸಾ ಕಿಟ್, ಸುರಕ್ಷತಾ ಜಾಕೆಟ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಒದಗಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.&lt;/p&gt;&lt;img&gt;&lt;p&gt;ಚಾರಣದ ವೇಳೆ ಹಾದಿ ತಪ್ಪುವ ಸಾಧ್ಯತೆಯನ್ನು ಕಡಿಮೆಗೊಳಿಸಲು ಮಾರ್ಗದುದ್ದಕ್ಕೂ ಸೂಚನಾ ಫಲಕಗಳು, ದಿಕ್ಕು ಸೂಚಿಸುವ ಸೈನ್&zwnj;ಬೋರ್ಡ್&zwnj;ಗಳು ಹಾಗೂ ಸ್ಥಳದ ಮಾಹಿತಿ ಒಳಗೊಂಡ ಹ್ಯಾಂಡ್&zwnj;ಬುಕ್&zwnj;ಗಳನ್ನು ವ್ಯವಸ್ಥೆ ಮಾಡಲಾಗಿದೆ. ಚಾರಣಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.&lt;/p&gt;&lt;img&gt;&lt;p&gt;ಇದರೊಂದಿಗೆ ಇನ್ನುಳಿದ ಪ್ರಮುಖ ಚಾರಣ ತಾಣಗಳನ್ನು ಜೂ.15ರ ಬಳಿಕ ಸಾರ್ವಜನಿಕರಿಗೆ ಮುಕ್ತಗೊಳಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮಳೆಗಾಲದ ಆರಂಭದಲ್ಲಿ ಹಸಿರು ಹೊದಿಕೆ ತೊಟ್ಟಿರುವ ಕುದುರೆಮುಖ ವಲಯದ ಬೆಟ್ಟಗಳು ಈಗಾಗಲೇ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಚಾರಣ ಆರಂಭವಾಗಿರುವುದು ಪ್ರಕೃತಿ ಪ್ರಿಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ.&lt;/p&gt;]]></content:encoded>
            <category>chikkamagalur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/travel/karnataka-tourism-kuduremukha-trek-allowed-official-permission-from-today-mrq-ygp7g0t"/>
        </item>
    </channel>
</rss>
