<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 27 Apr 2026 12:09:36 +0530</lastBuildDate>
        <atom:link href="https://kannada.asianetnews.com/rss/chikkamagalur" rel="self" type="application/rss+xml"/>
        <item>
            <title><![CDATA[Mudigere: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಗದರಿದ್ದಕ್ಕೆ ಪ್ರಾಣ ಕಳೆದುಕೊಂಡ 22ರ ಮಗಳು]]></title>
            <link>https://kannada.asianetnews.com/gallery/karnataka-districts/22-year-old-daughter-loses-life-after-being-scolded-by-father-in-devavrunda-mudigere-chikkamagaluru-mrq-1gs44e1</link>
            <guid isPermaLink="true">https://kannada.asianetnews.com/gallery/karnataka-districts/22-year-old-daughter-loses-life-after-being-scolded-by-father-in-devavrunda-mudigere-chikkamagaluru-mrq-1gs44e1</guid>
            <pubDate>Sun, 26 Apr 2026 09:10:34 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ, ಸಾಂಬಾರ್ ಮಾಡಿಲ್ಲವೆಂದು ತಂದೆ ಗದರಿದ್ದಕ್ಕೆ ಮನನೊಂದು 22 ವರ್ಷದ ಯುವತಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ತಂದೆ ಪಕ್ಕದ ಮನೆಯಿಂದ ಸಾಂಬಾರ್ ತರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದು, ಈ ಕುರಿತು ಗೋಣೀಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq3xm4p9pqqsbx9zfsdrw93n,imgname-ckm-suicide-1777174450889.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನಲ್ಲಿ, ಸಾಂಬಾರ್ ಮಾಡಿಲ್ಲವೆಂದು ತಂದೆ ಗದರಿದ್ದಕ್ಕೆ ಮನನೊಂದು 22 ವರ್ಷದ ಯುವತಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ. ತಂದೆ ಪಕ್ಕದ ಮನೆಯಿಂದ ಸಾಂಬಾರ್ ತರುವಷ್ಟರಲ್ಲಿ ಮಗಳು ನೇಣಿಗೆ ಶರಣಾಗಿದ್ದು, ಈ ಕುರಿತು ಗೋಣೀಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;img&gt;&lt;p&gt;ಸಾಂಬಾರ್ ಮಾಡಿಲ್ಲವೆಂದು ಅಪ್ಪ ಗದರಿದ್ದಕ್ಕೆ 22 ವರ್ಷದ ಮಗಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ.&lt;/p&gt;&lt;img&gt;&lt;p&gt;ಶನಿವಾರ ಬೆಳಗ್ಗೆ ಸಾಂಬಾರ್ ಮಾಡಲು ಬೇಕಾಗುವ ತರಕಾರಿಯನ್ನು ಸೌಜನ್ಯ ತಂದು ಕೊಟ್ಟಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಇದರಿಂದ ಕೋಪಗೊಂಡಿದ್ದ ತಂದೆ ಮಗಳಿಗೆ ಸ್ವಲ್ಪ ಗದರಿದ್ದರು. ಮಗಳಿಗೆ ಬೈದ ಅಪ್ಪ ಸಾಂಬರ್ ತರಲು ಪಕ್ಕದ ಮನೆಗೆ ಹೋಗಿದ್ದರು.&lt;/p&gt;&lt;img&gt;&lt;p&gt;ತಂದೆಯ ಮಾತುಗಳಿಂದ ನೊಂದ ಸೌಜನ್ಯ ನೇಣುಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪಕ್ಕದ್ಮನೆಯಿಂದ ಸಾಂಬಾರ್ ತೆಗೆದುಕೊಂಡು ಬರುವಷ್ಟರಲ್ಲಿ ಸೌಜನ್ಯ ಪ್ರಾಣ ಕಳೆದುಕೊಂಡಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Dharwad: ಹೈದರ್&zwnj;ಶಾವಲಿ ದರ್ಗಾ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ಬಿಡುಗಡೆ; ಭೂಮಿಪೂಜೆ&lt;/strong&gt;&lt;/p&gt;&lt;img&gt;&lt;p&gt;ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ರವಾನಿಸಿ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಗೋಣೀಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;2 ವರ್ಷ ಹಿಂದೆ ಓಡಿಹೋಗಿದ್ದ ಪತ್ನಿ ಮತದಾನ ವೇಳೆ ಸಿಕ್ಕಿಬಿದ್ಲು: ಹೆಂಡ್ತಿ ಹಿಡಿಯಲು ನೆರವಾದ SIR!&lt;/strong&gt;&lt;/p&gt;]]></content:encoded>
            <category>chikkamagalur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/22-year-old-daughter-loses-life-after-being-scolded-by-father-in-devavrunda-mudigere-chikkamagaluru-mrq-1gs44e1"/>
        </item>
        <item>
            <title><![CDATA[ಬೇಸಿಗೆ ರಜೆ ನಾಲ್ಕೇ ದಿನಗಳಲ್ಲಿ 4 ಚಿಣ್ಣರ ಸಾವು; ಮಕ್ಕಳಿಗೆ ಒಂದು ಕ್ಷಣದ ಮೋಜು, ಪೋಷಕರಿಗೆ ಜೀವನವಿಡೀ ಶೋಕ!]]></title>
            <link>https://kannada.asianetnews.com/karnataka-districts/chikkamagaluru-drowning-tragedy-four-deaths-in-4-days-summer-vacation-alert-sat/articleshow-31ktvwl</link>
            <guid isPermaLink="true">https://kannada.asianetnews.com/karnataka-districts/chikkamagaluru-drowning-tragedy-four-deaths-in-4-days-summer-vacation-alert-sat/articleshow-31ktvwl</guid>
            <pubDate>Wed, 22 Apr 2026 19:07:52 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ ಬೇಸಿಗೆ ರಜೆಯ ಸಂಭ್ರಮದ ನಡುವೆ ಶೋಕದ ಛಾಯೆ ಆವರಿಸಿದೆ. ಕೇವಲ ನಾಲ್ಕು ದಿನಗಳ ಅಂತರದಲ್ಲಿ, ಜಿಲ್ಲೆಯ ವಿವಿಧ ಜಲಮೂಲಗಳಲ್ಲಿ ಈಜಲು ಹೋಗಿ ಬಾಲಕ ಸೇರಿದಂತೆ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸರಣಿ ದುರಂತಗಳು ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ಎಚ್ಚರಿಕೆಯ ಗಂಟೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kptpft575zcp14rcx9m0rvvw,imgname-chikkamagaluru-lake-1776864979110.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಏ.22): &lt;/strong&gt;ಬೇಸಿಗೆ ರಜೆ ಎಂದರೆ ಮಕ್ಕಳಿಗೆ ಎಲ್ಲಿಲ್ಲದ ಸಂಭ್ರಮ. ಆಟ-ಪಾಠಗಳಿಂದ ಬಿಡುವು ಪಡೆದು ಎಂಜಾಯ್ ಮಾಡಬೇಕಾದ ಈ ಸಮಯದಲ್ಲಿ ಮಲೆನಾಡಿನ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಶೋಕದ ಛಾಯೆ ಆವರಿಸಿದೆ. ಕಾಫಿನಾಡಿನ ಏರುತ್ತಿರುವ ಬಿಸಿಲ ತಾಪದಿಂದ ತಂಪು ಪಡೆಯಲು ಜಲಮೂಲಗಳತ್ತ ತೆರಳುತ್ತಿರುವ ಮಕ್ಕಳು ಮತ್ತು ಯುವಕರು ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ. ಕಳೆದ ಕೇವಲ ನಾಲ್ಕು ದಿನಗಳ ಅಂತರದಲ್ಲಿ ಜಿಲ್ಲೆಯ ವಿವಿಧೆಡೆ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.&lt;/p&gt;&lt;h3&gt;&lt;strong&gt;ಅಯ್ಯನಕೆರೆಯಲ್ಲಿ ಬಾಲಕನ ಅಂತ್ಯ:&lt;/strong&gt;&lt;/h3&gt;&lt;p&gt;ತಾಜಾ ದುರಂತವು ಮಂಗಳವಾರ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಸಂಭವಿಸಿದೆ. ಬೇಸಿಗೆಯ ಸೆಕೆ ತಾಳಲಾರದೆ ಈಜಲು ಹೋದ 13 ವರ್ಷದ ಬಾಲಕ ಪೃಥ್ವಿರಾಜ್, ನೀರಿನ ಆಳ ತಿಳಿಯದೆ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದ ಬಾಲಕನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ರಜೆಯ ಖುಷಿಯಲ್ಲಿದ್ದ ಬಾಲಕ ಹೀಗೆ ಹೆಣವಾಗಿ ಮನೆಗೆ ಮರಳುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ.&lt;/p&gt;&lt;h2&gt;&lt;strong&gt;ಸರಣಿ ಸಾವಿನ ಆತಂಕಕಾರಿ ಅಂಕಿ-ಅಂಶ:&lt;/strong&gt;&lt;/h2&gt;&lt;p&gt;ಜಿಲ್ಲೆಯಲ್ಲಿ ಕಳೆದ ಶನಿವಾರದಿಂದ ಮಂಗಳವಾರದವರೆಗೆ ಜಲಸಮಾಧಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.&lt;/p&gt;&lt;p&gt;&lt;strong&gt;ಶನಿವಾರ: &lt;/strong&gt;ನರಸಿಂಹರಾಜಪುರ (NR Pura) ತಾಲೂಕಿನ ಸಿದ್ದರಾಮಯ್ಯ ಸೇತುವೆ ಬಳಿ ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ನಿತಿನ್ ಎಂಬ ಯುವಕ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದ.&lt;/p&gt;&lt;p&gt;&lt;strong&gt;ಭಾನುವಾರ: &lt;/strong&gt;ಆಲ್ದೂರು ಸಮೀಪದ ಹಾಗಲ ಎಂಬ ಗ್ರಾಮದಲ್ಲಿ ಮೀನು ಹಿಡಿಯಲು ಹೋದ ಮಹೇಶ್ ಹಾಗೂ ರಮೇಶ್ ಎಂಬ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರು.&lt;/p&gt;&lt;p&gt;&lt;strong&gt;ಮಂಗಳವಾರ: &lt;/strong&gt;ಕಡೂರಿನ ಅಯ್ಯನಕೆರೆಯಲ್ಲಿ ಬಾಲಕ ಪೃಥ್ವಿರಾಜ್ ಬಲಿಯಾಗಿದ್ದಾನೆ.&lt;/p&gt;&lt;h3&gt;&lt;strong&gt;ಬೇಸಿಗೆಯಲ್ಲಿ ಜಲಮೂಲಗಳು ಏಕೆ ಅಪಾಯಕಾರಿ?&lt;/strong&gt;&lt;/h3&gt;&lt;p&gt;ಸಾಮಾನ್ಯವಾಗಿ ಬೇಸಿಗೆಯಲ್ಲಿ ಕೆರೆ, ಹಳ್ಳಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುತ್ತದೆ. ಆದರೆ, ಮೇಲ್ನೋಟಕ್ಕೆ ನೀರು ಕಡಿಮೆ ಎನಿಸಿದರೂ ತಳಭಾಗದಲ್ಲಿ ಕೆಸರು ಹೆಚ್ಚಾಗಿರುತ್ತದೆ. ಈಜಲು ಹೋದಾಗ ಅಥವಾ ಮೀನು ಹಿಡಿಯಲು ಇಳಿದಾಗ ಈ ಕೆಸರಿನಲ್ಲಿ ಕಾಲು ಹೂತುಹೋಗುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೆ, ನೀರಿನ ಆಳ ಮತ್ತು ಸುಳಿಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ದುಸ್ಸಾಹಸಕ್ಕೆ ಕೈ ಹಾಕುವುದು ಸಾವಿಗೆ ನೇರ ಆಹ್ವಾನ ನೀಡಿದಂತಾಗುತ್ತದೆ.&lt;/p&gt;&lt;h2&gt;&lt;strong&gt;ಪೋಷಕರಿಗೆ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಶಾಲೆಗಳಿಗೆ ಈಗ ಬೇಸಿಗೆ ರಜೆ ಇರುವುದರಿಂದ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ. ಮಕ್ಕಳು ಮನೆಯಿಂದ ಹೊರಗೆ ಹೋದಾಗ ಎಲ್ಲಿಗೆ ಹೋಗುತ್ತಿದ್ದಾರೆ? ಯಾರ ಜೊತೆಗಿದ್ದಾರೆ? ಎಂಬುದರ ಮೇಲೆ ನಿಗಾ ಇಡಬೇಕು. ಕೆರೆ, ಬಾವಿ, ಹಳ್ಳ ಅಥವಾ ನದಿಗಳತ್ತ ಮಕ್ಕಳು ಆಟವಾಡಲು ಹೋಗದಂತೆ ಎಚ್ಚರಿಸಬೇಕು.&lt;/p&gt;&lt;h3&gt;&lt;strong&gt;ಸಾರ್ವಜನಿಕರಲ್ಲಿ ಮನವಿ:&lt;/strong&gt;&lt;/h3&gt;&lt;p&gt;ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಅಪಾಯಕಾರಿ ಜಲಮೂಲಗಳ ಬಳಿ ಈಗಾಗಲೇ ಎಚ್ಚರಿಕೆ ಫಲಕಗಳನ್ನು ಅಳವಡಿಸಿದೆ. ಆದರೆ, ಪ್ರವಾಸಿಗರು ಮತ್ತು ಸ್ಥಳೀಯರು ಇಂತಹ ಎಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ. 'ಒಂದು ಕ್ಷಣದ ಮೋಜು, ಜೀವನವಿಡೀ ಶೋಕ' ತರಬಲ್ಲದು ಎಂಬ ಅರಿವು ಎಲ್ಲರಲ್ಲೂ ಇರಲಿ. ಕಾಫಿನಾಡಿನ ಈ ಸರಣಿ ಸಾವುಗಳು ನಮಗೆ ದೊಡ್ಡ ಪಾಠವಾಗಬೇಕಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-drowning-tragedy-four-deaths-in-4-days-summer-vacation-alert-sat/articleshow-31ktvwl"/>
        </item>
        <item>
            <title><![CDATA[ಚಾರ್ಮಾಡಿ ಘಾಟ್‌ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ; ತುಮಕೂರಿನ 20ಕ್ಕೂ ಹೆಚ್ಚು ಮಂದಿಗೆ ಗಾಯ!]]></title>
            <link>https://kannada.asianetnews.com/gallery/karnataka-districts/charmadi-ghat-bus-accident-pavagada-passengers-injured-wedding-bus-overturns-sat-5nqufta</link>
            <guid isPermaLink="true">https://kannada.asianetnews.com/gallery/karnataka-districts/charmadi-ghat-bus-accident-pavagada-passengers-injured-wedding-bus-overturns-sat-5nqufta</guid>
            <pubDate>Sun, 26 Apr 2026 16:29:07 +0530</pubDate>
            <description><![CDATA[&lt;p&gt;ಧರ್ಮಸ್ಥಳದಲ್ಲಿ ಮದುವೆ ಮುಗಿಸಿ ಪಾವಗಡಕ್ಕೆ ಹಿಂತಿರುಗುತ್ತಿದ್ದ ಖಾಸಗಿ ಬಸ್ಸೊಂದು ಚಾರ್ಮಾಡಿ ಘಾಟ್&zwnj;ನ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq4pkv90fh741xv4f79my8aj,imgname-mudigere-passenger-bus-overturn-1777200655648.jpg" type="image/jpeg" height="390" width="690"/>
            <content:encoded><![CDATA[&lt;p&gt;ಧರ್ಮಸ್ಥಳದಲ್ಲಿ ಮದುವೆ ಮುಗಿಸಿ ಪಾವಗಡಕ್ಕೆ ಹಿಂತಿರುಗುತ್ತಿದ್ದ ಖಾಸಗಿ ಬಸ್ಸೊಂದು ಚಾರ್ಮಾಡಿ ಘಾಟ್&zwnj;ನ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರು/ಮೂಡಿಗೆರೆ (ಏ.26): ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಚಾರ್ಮಾಡಿ ಘಾಟ್&zwnj;ನಲ್ಲಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮವಾಗಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.&lt;/p&gt;&lt;img&gt;&lt;p&gt;ಈ ಖಾಸಗಿ ಬಸ್ಸು ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಯಾಣಿಕರನ್ನು ಹೊತ್ತು ಧರ್ಮಸ್ಥಳದಿಂದ ವಾಪಸ್ಸಾಗುತ್ತಿತ್ತು. ಪಾವಗಡದ ಒಂದು ಕುಟುಂಬ ಮತ್ತು ಸಂಬಂಧಿಕರು ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ತೆರಳುತ್ತಿದ್ದರು. ಆದರೆ, ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವುಗಳಲ್ಲಿ ಒಂದಾದ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಲ್ಲೇ ಉರುಳಿಬಿದ್ದಿದೆ.&lt;/p&gt;&lt;img&gt;&lt;p&gt;ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಹಾಗೂ ಆ ಮಾರ್ಗವಾಗಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ತಕ್ಷಣವೇ ಧಾವಿಸಿ ಬಂದಿದ್ದಾರೆ. ಬಸ್ಸಿನ ಒಳಗಿದ್ದ ಗಾಯಾಳುಗಳನ್ನು ಕಿಟಕಿ ಮತ್ತು ಬಾಗಿಲುಗಳ ಮೂಲಕ ಹೊರತೆಗೆದು ರಕ್ಷಣೆ ಮಾಡಲಾಗಿದೆ. ಈ ವೇಳೆ ಸ್ಥಳದಲ್ಲಿ ಅಳಲು-ಚೀರಾಟ ಮನೆಮಾಡಿತ್ತು.&lt;/p&gt;&lt;p&gt;&lt;strong&gt;ಆಸ್ಪತ್ರೆಗೆ ರವಾನೆ ಮತ್ತು ಗಂಭೀರ ಸ್ಥಿತಿ:&lt;/strong&gt;&lt;/p&gt;&lt;p&gt;ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆಯೇ ಸುಮಾರು 5 ರಿಂದ 6 ಆಂಬುಲೆನ್ಸ್&zwnj;ಗಳು ಸ್ಥಳಕ್ಕೆ ಧಾವಿಸಿದವು. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಹಾಗೂ ಕಕ್ಕಿಂಜೆಯ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;img&gt;&lt;p&gt;ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಕ್ರೇನ್ ಮೂಲಕ ಬಸ್ಸನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.&lt;/p&gt;&lt;p&gt;ಚಾರ್ಮಾಡಿ ಘಾಟ್&zwnj;ನ ಕಡಿದಾದ ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಅತೀ ವೇಗ ಮತ್ತು ನಿರ್ಲಕ್ಷ್ಯ ಈ ರೀತಿಯ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ಪಾವಗಡ ಮೂಲದ ಈ ಪ್ರಯಾಣಿಕರ ಕುಟುಂಬದಲ್ಲಿ ಮದುವೆಯ ಸಂಭ್ರಮದ ನಡುವೆಯೇ ಈ ದುರ್ಘಟನೆ ನಡೆದಿರುವುದು ವಿಷಾದನೀಯ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/charmadi-ghat-bus-accident-pavagada-passengers-injured-wedding-bus-overturns-sat-5nqufta"/>
        </item>
        <item>
            <title><![CDATA[SSLC ಪರೀಕ್ಷಾ ಮಂಡಳಿ ಮತ್ತೊಂದು ಎಡವಟ್ಟು; 28 ಅಂಕ ಬಂದಿದ್ದ ವಿದ್ಯಾರ್ಥಿಗೆ ಸ್ಕ್ಯಾನ್ ಕಾಪಿಯಲ್ಲಿ ಸಿಕ್ಕಿತು 72 ಅಂಕ!]]></title>
            <link>https://kannada.asianetnews.com/karnataka-districts/chikkamagaluru-sslc-marks-error-ramadatta-sharma-sringeri-sat/articleshow-64irrhy</link>
            <guid isPermaLink="true">https://kannada.asianetnews.com/karnataka-districts/chikkamagaluru-sslc-marks-error-ramadatta-sharma-sringeri-sat/articleshow-64irrhy</guid>
            <pubDate>Mon, 27 Apr 2026 12:09:31 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನ ಶೃಂಗೇರಿಯ ಎಸ್&zwnj;ಎಸ್&zwnj;ಎಲ್&zwnj;ಸಿ ವಿದ್ಯಾರ್ಥಿ ರಾಮದತ್ತ ಶರ್ಮಾ ಇಂಗ್ಲಿಷ್&zwnj;ನಲ್ಲಿ 28 ಅಂಕ ಪಡೆದು ಕಂಗಾಲಾಗಿದ್ದ. ಶಿಕ್ಷಕರ ಧೈರ್ಯದ ಮೇರೆಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿ ಪಡೆದಾಗ, ಆತನಿಗೆ ನಿಜವಾಗಿ 72 ಅಂಕ ಬಂದಿರುವುದು ದೃಢಪಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq6tgspvma87gcvbzr4hx2gp,imgname-sslc-marks-sheet-error-1777271858907.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.27): ಎ&lt;/strong&gt;ಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪ್ರಕಟವಾದಾಗ ಕೆಲವೊಮ್ಮೆ ತಾಂತ್ರಿಕ ದೋಷಗಳು ವಿದ್ಯಾರ್ಥಿಗಳ ಜೀವನದ ಜೊತೆ ಹೇಗೆ ಆಟವಾಡುತ್ತವೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಕೇವಲ 28 ಅಂಕಗಳನ್ನು ಕಂಡು ಕಂಗಾಲಾಗಿದ್ದ ವಿದ್ಯಾರ್ಥಿಯೊಬ್ಬನಿಗೆ, ಸ್ಕ್ಯಾನ್ ಕಾಪಿ ಬಂದಾಗ ಬರೋಬ್ಬರಿ 72 ಅಂಕಗಳು ಬಂದಿರುವುದು ಬೆಳಕಿಗೆ ಬಂದಿದೆ.&lt;/p&gt;&lt;h3&gt;&lt;strong&gt;ಏನಿದು ಘಟನೆ?&lt;/strong&gt;&lt;/h3&gt;&lt;p&gt;ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ಎಂಬಾತ ಈ ಅನ್ಯಾಯಕ್ಕೆ ಒಳಗಾದ ದುರ್ದೈವಿ. ಎಸ್.ಎಸ್.ಎಲ್.ಸಿ ಫಲಿತಾಂಶ ಬಂದಾಗ ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತನಿಗೆ ಕೇವಲ 28 ಅಂಕಗಳು ಲಭಿಸಿದ್ದವು. ಓದಿನಲ್ಲಿ ಮುಂದಿದ್ದ ವಿದ್ಯಾರ್ಥಿಗೆ ಇಷ್ಟು ಕಡಿಮೆ ಅಂಕ ಬಂದಿದ್ದನ್ನು ನೋಡಿ ವಿದ್ಯಾರ್ಥಿ ಹಾಗೂ ಪೋಷಕರು ಅಕ್ಷರಶಃ ಕಂಗಾಲಾಗಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ರಾಮದತ್ತ ತನಗೆ ಅನ್ಯಾಯವಾಗಿದೆ ಎಂದು ಮನನೊಂದು ಕಣ್ಣೀರಿಟ್ಟಿದ್ದನು.&lt;/p&gt;&lt;h2&gt;&lt;strong&gt;ಧೈರ್ಯ ತುಂಬಿದ್ದ ಶಿಕ್ಷಕರು:&lt;/strong&gt;&lt;/h2&gt;&lt;p&gt;ವಿದ್ಯಾರ್ಥಿ ರಾಮದತ್ತನ ಅಂಕಗಳನ್ನು ನೋಡಿ ಶಾಲೆಯ ಶಿಕ್ಷಕರಿಗೂ ಅನುಮಾನ ಬಂದಿತ್ತು. ಕೂಡಲೇ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ ಶಿಕ್ಷಕರು, 'ನೀನು ಚೆನ್ನಾಗಿ ಬರೆದಿರುವುದು ನಮಗೆ ಗೊತ್ತು, ಧೈರ್ಯವಾಗಿರು' ಎಂದು ಸಾಂತ್ವನ ಹೇಳಿದ್ದರು. ಸ್ಕ್ಯಾನ್ ಕಾಪಿ (Scan Copy) ಬರುವವರೆಗೂ ತಾಳ್ಮೆಯಿಂದ ಇರುವಂತೆ ವಿದ್ಯಾರ್ಥಿಗೆ ಧೈರ್ಯ ತುಂಬಿದ್ದರು.&lt;/p&gt;&lt;h3&gt;&lt;strong&gt;ಬಟಾಬಯಲಾದ ಮಂಡಳಿಯ ಎಡವಟ್ಟು:&lt;/strong&gt;&lt;/h3&gt;&lt;p&gt;ಶಿಕ್ಷಕರ ಮಾರ್ಗದರ್ಶನದಂತೆ ರಾಮದತ್ತ ಇಂಗ್ಲಿಷ್ ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿಗಾಗಿ ಅರ್ಜಿ ಸಲ್ಲಿಸಿದ್ದನು. ಇಂದು ಸ್ಕ್ಯಾನ್ ಕಾಪಿ ಕೈಗೆ ಬಂದಾಗ ಪರೀಕ್ಷಾ ಮಂಡಳಿಯ ಮತ್ತು ಕಂಪ್ಯೂಟರ್ ಆಪರೇಟರ್&zwnj;ನ ಮಹಾನ್ ಎಡವಟ್ಟು ಬಯಲಾಗಿದೆ. ಉತ್ತರ ಪತ್ರಿಕೆಯಲ್ಲಿ ರಾಮದತ್ತನಿಗೆ 72 ಅಂಕಗಳು ಬಂದಿವೆ. ಆದರೆ, ಕಂಪ್ಯೂಟರ್&zwnj;ನಲ್ಲಿ ಅಂಕಗಳನ್ನು ನಮೂದಿಸುವಾಗ ಆಪರೇಟರ್ ಮಾಡಿದ ತಪ್ಪು ತಿದ್ದುಪಡಿಯಿಂದ ಕೇವಲ 28 ಅಂಕಗಳು ಮಾತ್ರ ದಾಖಲಾಗಿದ್ದವು.&lt;/p&gt;&lt;p&gt;ಒಟ್ಟಾರೆಯಾಗಿ 44 ಅಂಕಗಳಿಂದ ವಂಚಿತನಾಗಿದ್ದ ರಾಮದತ್ತ ಶರ್ಮಾ, ಈಗ ಸ್ಕ್ಯಾನ್ ಕಾಪಿಯಲ್ಲಿ ತನ್ನ ಅಸಲಿ ಅಂಕಗಳನ್ನು ಕಂಡು ನಿಟ್ಟುಸಿರು ಬಿಟ್ಟಿದ್ದಾನೆ. ಕಳೆದುಹೋಗಿದ್ದ ಮುಖದ ನಗು ಈಗ ಮತ್ತೆ ಮರಳಿದೆ.&lt;/p&gt;&lt;h3&gt;&lt;strong&gt;ವಿದ್ಯಾರ್ಥಿಗಳ ಆಕ್ರೋಶ:&lt;/strong&gt;&lt;/h3&gt;&lt;p&gt;ಒಬ್ಬ ವಿದ್ಯಾರ್ಥಿಯ ಪರಿಶ್ರಮದ ಫಲವನ್ನು ಇಂತಹ ಸಣ್ಣ ತಪ್ಪುಗಳು ಹಾಳು ಮಾಡುತ್ತವೆ. ಪರೀಕ್ಷಾ ಮಂಡಳಿಯು ಅಂಕಗಳನ್ನು ದಾಖಲಿಸುವಾಗ ಇನ್ನಷ್ಟು ಜಾಗರೂಕತೆ ವಹಿಸಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ, ರಾಮದತ್ತನಿಗೆ ಈಗ ನ್ಯಾಯ ಸಿಕ್ಕಂತಾಗಿದ್ದು, ಶೃಂಗೇರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-sslc-marks-error-ramadatta-sharma-sringeri-sat/articleshow-64irrhy"/>
        </item>
        <item>
            <title><![CDATA[Women Reservation bill ಮಹಿಳಾ ಮೀಸಲಾತಿ ವಿರೋಧಿಸೋರು ಸಮಾನತೆಯ ವೈರಿಗಳು: ಯಡಿಯೂರಪ್ಪ]]></title>
            <link>https://kannada.asianetnews.com/politics/bs-yadiyurappa-responce-about-women-reservation-bill-and-slams-congress-at-chikkamagaluru/articleshow-6yky3wd</link>
            <guid isPermaLink="true">https://kannada.asianetnews.com/politics/bs-yadiyurappa-responce-about-women-reservation-bill-and-slams-congress-at-chikkamagaluru/articleshow-6yky3wd</guid>
            <pubDate>Sat, 18 Apr 2026 12:08:54 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿದ ಅವರು, ಇದನ್ನು ವಿರೋಧಿಸುವ ವಿಪಕ್ಷಗಳ ನಿಲುವನ್ನು ತೀವ್ರವಾಗಿ ಖಂಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpfmhysk5rk6y32s502rjnhm,imgname-----------------------2026-04-18t111509.582-1776493853491.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.18):&lt;/strong&gt; ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಅಂತರದಿಂದ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.&lt;/p&gt;&lt;h2&gt;ಸಮಾನತೆಯ ವಿರುದ್ಧ ನಿಲ್ಲಬೇಡಿ&lt;/h2&gt;&lt;p&gt;ಮಹಿಳಾ ಮೀಸಲಾತಿಯನ್ನು ವಿರೋಧಿಸುವುದು ಸಮಾನತೆ ವಿರೋಧಿಗಳು. ಮಹಿಳಾ ಮೀಸಲಾತಿ ಬಗ್ಗೆ ಬಹಳ ವರ್ಷಗಳಿಂದ ಮಾತನಾಡಿಕೊಂಡು ಬರ್ತಿದ್ವಿ. ಇನ್ನು ಚರ್ಚೆ ಆಗಬೇಕು ಅಂದರೆ ಅದರ ವಿಳಂಬ ನೀತಿ ಸ್ಪಷ್ಟ ಆಗುತ್ತೆ. ಮಹಿಳಾ ಮೀಸಲಾತಿ ಜಾರಿ ಮಾಡ್ತಿರೋದು ರಾಜಕೀಯ ಲಾಭಕ್ಕಾಗಿ ಅನ್ನೋದು ತಪ್ಪು. ಒಳ್ಳೆಯ ನೀತಿ ಯಾವಾಗ ಬಂದರೂ ಒಳ್ಳೆಯದೆ ಬಸವಣ್ಣನವರು ಅಂದೇ ಹೆಣ್ಣು-ಗಂಡು ಭೇದವಿಲ್ಲದೆ ಸಮಾನ ಹಕ್ಕಿಗಾಗಿ ಹೋರಾಡಿದ್ದರು. ಅಕ್ಕಮಹಾದೇವಿಯಂತಹವರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಅದೇ ತತ್ವ ಮುಂದುವರಿಯಬೇಕೆಂದ್ರೆ ರಾಜಕೀಯದಲ್ಲಿ ಮಹಿಳೆಯರಿಗೆ ರಾಜಕೀಯ ಪ್ರವೇಶ, ಅವಕಾಶ ಕೊಡೋದು ಅನಿವಾರ್ಯ ಎಂದು ಪ್ರತಿಪಾದಿಸಿದರು. ಪ್ರತಿಯೊಂದಕ್ಕೂ ವಿರೋಧ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕರ ವಿರುದ್ಧ ಕಿಡಿಕಾರಿದರು.&lt;/p&gt;&lt;h3&gt;ಮೋದಿ ನಿರ್ಧಾರಕ್ಕೆ ಬೆಂಬಲಿಸಿ&lt;/h3&gt;&lt;p&gt;ಮಹಿಳಾ ಮೀಸಲಾತಿ ಜಾರಿಗೊಳಿಸಿರುವ ಪ್ರಧಾನಿ ಮೋದಿಯವರ ನಿರ್ಧಾರ ಐತಿಹಾಸಿಕವಾದುದು. ಇದು ರಾಜಕೀಯ ಲಾಭಕ್ಕಾಗಿ ಎಂಬ ಟೀಕೆಗಳು ತಪ್ಪು. ಇದನ್ನು ವಿಳಂಬ ಮಾಡುವ ನೀತಿ ಸರಿಯಲ್ಲ. ಒಳ್ಳೆಯ ಕೆಲಸ ಯಾವಾಗ ನಡೆದರೂ ಸ್ವಾಗತಾರ್ಹ. ಆದ್ದರಿಂದ ಪಕ್ಷಾತೀತವಾಗಿ ಎಲ್ಲರೂ ಮೋದಿಯವರ ಈ ನಿರ್ಧಾರಕ್ಕೆ ಬೆಂಬಲ ನೀಡಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/bs-yadiyurappa-responce-about-women-reservation-bill-and-slams-congress-at-chikkamagaluru/articleshow-6yky3wd"/>
        </item>
        <item>
            <title><![CDATA[ಚಿಕ್ಕಮಗಳೂರು ಟ್ರೆಕ್ಕಿಂಗ್ ಪ್ರಿಯರೇ ಗಮನಿಸಿ: ಅರಣ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ; ನಿಯಮ ಮೀರಿದರೆ ಶಿಕ್ಷೆ ಖಚಿತ!]]></title>
            <link>https://kannada.asianetnews.com/karnataka-districts/chikkamagaluru-trekking-new-guidelines-forest-department-rules-sat/articleshow-7b7eqpw</link>
            <guid isPermaLink="true">https://kannada.asianetnews.com/karnataka-districts/chikkamagaluru-trekking-new-guidelines-forest-department-rules-sat/articleshow-7b7eqpw</guid>
            <pubDate>Wed, 22 Apr 2026 11:50:01 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗಳ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯು ಚಾರಣಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಕಡ್ಡಾಯ ಆನ್&zwnj;ಲೈನ್ ನೋಂದಣಿ, ಟ್ರ್ಯಾಕಿಂಗ್ ಆ್ಯಪ್ ಬಳಕೆ, ಮಾರ್ಗದರ್ಶಕರ ನೇಮಕ, ಮತ್ತು ಪರಿಸರ ಸಂರಕ್ಷಣಾ ಕ್ರಮಗಳು ಸೇರಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpsxb9n0mbe4fpde1evm7685,imgname-chikkamagaluru-trecking-new-guidelines-1776838616736.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್&zwnj; ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಏ.22): ಚಿ&lt;/strong&gt;ಕ್ಕಮಗಳೂರು ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ಮಾಡುವ ಪ್ರವಾಸಿಗರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಅರಣ್ಯ ಇಲಾಖೆ ಮಹತ್ವದ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇತ್ತೀಚೆಗೆ ಮಾಣಿಕ್ಯಧಾರ ಪ್ರದೇಶದಲ್ಲಿ ಕೇರಳದ ಬಾಲಕಿ ಸಾವನ್ನಪ್ಪಿದ ದುರ್ಘಟನೆ ಹಾಗೂ ಕೊಡಗಿನಲ್ಲಿ ನಡೆದ ಶರಣ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಳಿಕ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರ ಸೂಚನೆಯಂತೆ ರೂಪಿಸಲಾದ ಈ ಹೊಸ ವ್ಯವಸ್ಥೆಯನ್ನು ಮುಂದಿನ ಮೂರುರಿಂದ ನಾಲ್ಕು ವಾರಗಳಲ್ಲಿ ಸಂಪೂರ್ಣವಾಗಿ ಜಾರಿಗೆ ತರಲಾಗುತ್ತದೆ. ಇದರ ಮುಖ್ಯ ಉದ್ದೇಶ ಟ್ರೆಕ್ಕಿಂಗ್ ವೇಳೆ ಸಂಭವಿಸಬಹುದಾದ ಅಪಾಯಗಳನ್ನು ತಡೆದು, ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸುವುದಾಗಿದೆ.&lt;/p&gt;&lt;h3&gt;&lt;strong&gt;ಕಡ್ಡಾಯ ನೋಂದಣಿ ಮತ್ತು ಡಿಜಿಟಲ್ ನಿಯಂತ್ರಣ&lt;/strong&gt;&lt;/h3&gt;&lt;p&gt;ಇನ್ನು ಮುಂದೆ ಚಾರಣ ಕೈಗೊಳ್ಳಲು ಬಯಸುವ ಪ್ರತಿಯೊಬ್ಬರೂ ಅರಣ್ಯ ವಿಹಾರ ಪೋರ್ಟಲ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಜೊತೆಗೆ, ಪ್ರತಿ ಚಾರಣಿಗನ ಮೊಬೈಲ್ನಲ್ಲಿ ಪಥದರ್ಶಕ ಆ್ಯಪ್ ಇರಬೇಕು. ಈ ಆ್ಯಪ್ ಮೂಲಕ ಟ್ರೆಕ್ಕಿಂಗ್ ಚಟುವಟಿಕೆಗಳನ್ನು ನಿಗಾದಲ್ಲಿಡಲಾಗುತ್ತದೆ. ನಿಯಮ ಉಲ್ಲಂಘಿಸುವವರನ್ನು ಕಪ್ಪುಪಟ್ಟಿಗೆ ಸೇರಿಸಿ ಮುಂದಿನ ಚಾರಣಕ್ಕೆ ನಿರ್ಬಂಧ ವಿಧಿಸುವ ವ್ಯವಸ್ಥೆಯೂ ಇದರಲ್ಲಿ ಅಳವಡಿಸಲಾಗಿದೆ.&lt;/p&gt;&lt;h2&gt;&lt;strong&gt;ಮಾರ್ಗದರ್ಶಕರ ನೇಮಕ ಮತ್ತು ನಿಗಾವ್ಯವಸ್ಥೆ&lt;/strong&gt;&lt;/h2&gt;&lt;p&gt;ಹೊಸ ನಿಯಮಗಳ ಪ್ರಕಾರ, ಹತ್ತು ಮಂದಿಯ ಪ್ರತಿಯೊಂದು ಗುಂಪಿಗೆ ಒಬ್ಬ ಅಧಿಕೃತ ಮಾರ್ಗದರ್ಶಕ ಕಡ್ಡಾಯ. ಅವರು ಪ್ರತಿ ಅರ್ಧ ಗಂಟೆಗೆ ವಾಕಿಟಾಕಿ ಮೂಲಕ ಮೂಲ ಶಿಬಿರಕ್ಕೆ ಮಾಹಿತಿ ರವಾನಿಸಬೇಕು. ಇದರಿಂದ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಸಹಾಯವಾಗಲಿದೆ.ಚಾರಣ ಮಾರ್ಗಗಳಲ್ಲಿ ಸಹ ಮಹತ್ವದ ಬದಲಾವಣೆ ತರಲಾಗಿದೆ. ಪ್ರತಿ 200 ಮೀಟರ್ಗೂ ದಾರಿ ಸೂಚಕ ಫಲಕಗಳನ್ನು ಅಳವಡಿಸಲಾಗುತ್ತದೆ. ಜೊತೆಗೆ, ಪ್ರತಿ 2 ಕಿಲೋಮೀಟರ್ಗೂ ಒಂದು ವಿಶ್ರಾಂತಿ ತಾಣ ನಿರ್ಮಾಣ ಮಾಡುವ ಯೋಜನೆ ಇದೆ. ಇದರಿಂದ ಟ್ರೆಕ್ಕಿಂಗ್ ಮಾಡುವವರಿಗೆ ದಾರಿತಪ್ಪುವ ಅಪಾಯ ಕಡಿಮೆಯಾಗಲಿದೆ.&lt;/p&gt;&lt;h2&gt;&lt;strong&gt;ಪರಿಸರ ಮತ್ತು ಸುರಕ್ಷತಾ ನಿಯಮಗಳು&lt;/strong&gt;&lt;/h2&gt;&lt;p&gt;ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚುವ ಸಾಮಗ್ರಿಗಳು, ಸಿಗರೇಟ್ ಮತ್ತು ಪಟಾಕಿಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅಬ್ಬರದ ಸಂಗೀತಕ್ಕೂ ನಿರ್ಬಂಧ ವಿಧಿಸಲಾಗಿದೆ. ಕಾಡಿನ ಶಾಂತತೆಯನ್ನು ಕಾಪಾಡುವುದರ ಜೊತೆಗೆ ಅಗ್ನಿ ಅವಘಡಗಳನ್ನು ತಡೆಯುವುದು ಇದರ ಉದ್ದೇಶ.ಪ್ರತಿ ಚಾರಣಿಗನಿಗೂ ತುರ್ತು ಸಂದರ್ಭಗಳಲ್ಲಿ ಬಳಸಲು ವಿಸಿಲ್ ನೀಡಲಾಗುತ್ತದೆ. ಗುಂಪಿನಿಂದ ದೂರವಾದಲ್ಲಿ ಇದರ ಮೂಲಕ ಗಮನ ಸೆಳೆಯಬಹುದು. ಜೊತೆಗೆ, ಕಾಡಿನ ಪರಿಸರಕ್ಕೆ ಹೊಂದುವ ಅಥವಾ ಸ್ಪಷ್ಟವಾಗಿ ಕಾಣುವ ಜಾಕೆಟ್ ಧರಿಸುವುದು ಕಡ್ಡಾಯವಾಗಿದೆ. ತಮ್ಮ ಆರೋಗ್ಯದ ವಿವರಗಳನ್ನು ಮುಂಚಿತವಾಗಿ ಮಾರ್ಗದರ್ಶಕರಿಗೆ ನೀಡುವ ನಿಯಮವೂ ಜಾರಿಯಲ್ಲಿರಲಿದೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳ ಮೇಲೂ ಕಟ್ಟುನಿಟ್ಟಿನ ಕ್ರಮ&lt;/strong&gt;&lt;/h3&gt;&lt;p&gt;ಈ ಎಸ್ಒಪಿ ಅನುಷ್ಠಾನದಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿ ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.ಈ ಹೊಸ ನಿಯಮಗಳು ಜಾರಿಯಾದ ನಂತರ ಚಿಕ್ಕಮಗಳೂರು ಜಿಲ್ಲೆಯ ಟ್ರೆಕ್ಕಿಂಗ್ ಚಟುವಟಿಕೆಗಳು ಇನ್ನಷ್ಟು ಸುರಕ್ಷಿತ ಮತ್ತು ಶಿಸ್ತುಬದ್ಧವಾಗಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪ್ರವಾಸಿಗರ ಸುರಕ್ಷತೆ ಮತ್ತು ಪರಿಸರ ಸಂರಕ್ಷಣೆಯನ್ನು ಒಂದೇ ಸಮಯದಲ್ಲಿ ಸಾಧಿಸುವತ್ತ ಇದು ಮಹತ್ವದ ಹೆಜ್ಜೆಯಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-trekking-new-guidelines-forest-department-rules-sat/articleshow-7b7eqpw"/>
        </item>
        <item>
            <title><![CDATA[ಅಂಗಡಿ ಪಾಲಾಗುತ್ತಿದ್ದ 400 ಕೆಜಿ ಅನ್ನ ಭಾಗ್ಯದ ಅಕ್ಕಿ ಅಧಿಕಾರಿಗಳಿಂದ ಜಪ್ತಿ]]></title>
            <link>https://kannada.asianetnews.com/state/anna-bhagya-rice-illegal-sale-in-chikkamagaluru/articleshow-8c4t3xp</link>
            <guid isPermaLink="true">https://kannada.asianetnews.com/state/anna-bhagya-rice-illegal-sale-in-chikkamagaluru/articleshow-8c4t3xp</guid>
            <pubDate>Thu, 23 Apr 2026 19:21:03 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ, ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಆಟೋದಲ್ಲಿ ಸಾಗಿಸುತ್ತಿದ್ದಾಗ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಸುಮಾರು 4 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpx9bdp8fcgrkdwspk37ksdk,imgname-annabhagya-rice-1776951867080.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿ ಜಪ್ತಿ:&lt;/strong&gt;&lt;/h2&gt;&lt;p&gt;ಚಿಕ್ಕಮಗಳೂರು: ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜನರು ಅನ್ನಭಾಗ್ಯದಲ್ಲಿ ಸಿಕ್ಕ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿದ್ದು, ಆಟೋ ಚಾಲಕರೊಬ್ಬರು ಕ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದರು. ಆದರೆ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ 4 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.&lt;/p&gt;&lt;p&gt;ಈ ಅಕ್ಕಿಯನ್ನು ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಈ ಅಕ್ಕಿಗೆ ಯಾವುದೇ ಬಿಲ್ ಇಲ್ಲದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜನರಿಂದ ಸಂಗ್ರಹಿಸಿದ ಅಕ್ಕಿಯನ್ನು ನಗರದ ಅಂಗಡಿಯೊಂದಕ್ಕೆ ಮಾರಾಟಕ್ಕೆ ಸಿದ್ಧತೆ ಮಾಡಲಾಗಿತ್ತು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಎನ್&zwnj;.ಎಂ.ಸಿ ವೃತ್ತದಲ್ಲಿ ಘಟನೆ ನಡೆದಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಕ್ಕಳೇ ಪರೀಕ್ಷೆಯ ಜೀವನವಲ್ಲ: ಸಾವಿಗೆ ಶರಣಾಗದಿರಿ: ಚಿತ್ರದುರ್ಗದಲ್ಲಿ ಬಾಲಕ, ಮೈಸೂರಲ್ಲಿ ಬಾಲಕಿ ಸಾವು&lt;/strong&gt;&amp;nbsp;&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chikkamagalur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/anna-bhagya-rice-illegal-sale-in-chikkamagaluru/articleshow-8c4t3xp"/>
        </item>
        <item>
            <title><![CDATA[ಕಂಠಪೂರ್ತಿ ಎಣ್ಣೆ ಹಾಕಿ KSRTC ಬಸ್ ಅಡ್ಡಗಟ್ಟಿದ ರೌಡಿಗಳು; ಕಥೆ ಮುಗೀತು ಅನ್ಕೊಂಡ್ರೆ ಸೆಲ್ಫಿ ಕ್ಲಿಕ್ಕಿಸಿ ಎಸ್ಕೇಪ್!]]></title>
            <link>https://kannada.asianetnews.com/karnataka-districts/chikkamagaluru-drunkards-block-ksrtc-bus-for-selfie-midnight-rowdyism-sat/articleshow-8kqav69</link>
            <guid isPermaLink="true">https://kannada.asianetnews.com/karnataka-districts/chikkamagaluru-drunkards-block-ksrtc-bus-for-selfie-midnight-rowdyism-sat/articleshow-8kqav69</guid>
            <pubDate>Fri, 24 Apr 2026 15:22:14 +0530</pubDate>
            <description><![CDATA[&lt;p&gt;ಚಿಕ್ಕಮಗಳೂರಿನಲ್ಲಿ ಮಧ್ಯರಾತ್ರಿ ಕುಡಿದ ಮತ್ತಿನಲ್ಲಿದ್ದ ಕಿಡಿಗೇಡಿಗಳು ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿ ಚಾಲಕನಿಗೆ ಧಮಕಿ ಹಾಕಿದ್ದಾರೆ. ಬಸ್ಸಿನ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ ಮೆರೆದಿದ್ದು, &amp;nbsp;ಪ್ರಯಾಣಿಕರು ಭಯಭೀತರಾಗಿದ್ದಾರೆ. ಈ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpzeepc2ycdbg8r0s0rx0cg3,imgname-chikkamagaluru-ksrtc-bus-selfie-1777024326018.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.24): ಕಾ&lt;/strong&gt;ಫಿನಾಡು ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳ ದಾಂಧಲೆ ಮಿತಿಮೀರಿದೆ. ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇವೆಂಬ ಪ್ರಜ್ಞೆಯೂ ಇಲ್ಲದ ಕೆಲವು ಪುಂಡರು, ಮಧ್ಯರಾತ್ರಿ ರಸ್ತೆ ಮಧ್ಯೆಯೇ ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿ, ಚಾಲಕನಿಗೆ ಧಮಕಿ ಹಾಕಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಅಸಹ್ಯಕರ ಘಟನೆ ನಡೆದಿದೆ. ಈ ಕಿಡಿಗೇಡಿಗಳ ವರ್ತನೆಯಿಂದಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿ ಆತಂಕದಲ್ಲೇ ಕಾಲ ಕಳೆದಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಕಳೆದ ರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ಈ ಹೈಡ್ರಾಮಾ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರು ನಗರದ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸನ್ನು ನಗರದ ದಂಟರಮಕ್ಕಿ ಸರ್ಕಲ್ ಸಮೀಪದ 'ಟೆಂಡರ್ ಚಿಕನ್' ಮಳಿಗೆಯ ಬಳಿ ಆಟೋದಲ್ಲಿ ಬಂದ ಕುಡುಕರು ತಡೆದಿದ್ದಾರೆ. ತಮ್ಮ ಆಟೋವನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಈ ಕಿಡಿಗೇಡಿಗಳು, ಬಸ್ ಸಂಚಾರಕ್ಕೆ ಸಂಪೂರ್ಣ ಅಡ್ಡಿಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಚಾಲಕನಿಗೆ ದರ್ಪ, ಸೆಲ್ಫಿ ವಿಕೃತಿ:&lt;/strong&gt;&lt;/h2&gt;&lt;p&gt;ರಸ್ತೆ ಬಿಡುವಂತೆ ಬಸ್ ಚಾಲಕ ವಿನಂತಿಸಿದರೂ ಕಿವಿಗೊಡದ ಈ ಕುಡುಕರು, ಚಾಲಕನ ಮೇಲೆಯೇ ದರ್ಪ ತೋರಿದ್ದಾರೆ. ಅಷ್ಟಕ್ಕೇ ನಿಲ್ಲದ ಇವರ ವಿಕೃತಿ, ಬಸ್ಸಿನ ಮುಂಭಾಗದಲ್ಲಿ ನಿಂತು ಫೋಸು ನೀಡುತ್ತಾ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಶುರು ಮಾಡಿದ್ದಾರೆ. ಬಸ್ಸು ಅಡ್ಡಗಟ್ಟಿ ಗೂಂಡಾಗಿರಿ ನಡೆಸುತ್ತಾ, ಅದನ್ನು ಸಂಭ್ರಮದಂತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಇವರ ವರ್ತನೆ ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಆತಂಕಕ್ಕೊಳಗಾದ ಪ್ರಯಾಣಿಕರು:&lt;/strong&gt;&lt;/h3&gt;&lt;p&gt;ಮಧ್ಯರಾತ್ರಿ ನಿರ್ಜನ ಪ್ರದೇಶದಂತಿದ್ದ ರಸ್ತೆಯಲ್ಲಿ ಕಿಡಿಗೇಡಿಗಳ ಅಬ್ಬರ ಕಂಡು ಬಸ್ಸಿನಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಕಿಡಿಗೇಡಿಗಳ ಈ ಗೂಂಡಾಗಿರಿಯನ್ನು ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರು ತಮ್ಮ ಮೊಬೈಲ್&zwnj;ಗಳಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಪೊಲೀಸರ ವಿರುದ್ಧವೂ ಕಿಡಿಕಾರುತ್ತಿದ್ದಾರೆ. &quot;ನಗರದ ಮಧ್ಯಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಸಾಮಾನ್ಯ ಜನರ ಸುರಕ್ಷತೆಯ ಗತಿಯೇನು?&quot; ಎಂದು ಜನರು ಪ್ರಶ್ನಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಪೊಲೀಸ್ ಕ್ರಮಕ್ಕೆ ಒತ್ತಾಯ:&lt;/strong&gt;&lt;/h3&gt;&lt;p&gt;ಈ ಘಟನೆಯು ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವುದು ಮಾತ್ರವಲ್ಲದೆ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಈ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಕಾನೂನಿನ ಪಾಠ ಕಲಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮಧ್ಯರಾತ್ರಿ ಗಸ್ತು ತಿರುಗುವ ಪೊಲೀಸರು ಇಂತಹ ಪುಂಡರ ಮೇಲೆ ಹದ್ದಿನ ಕಣ್ಣಿಡಬೇಕು ಮತ್ತು ದಂಟರಮಕ್ಕಿ ಸರ್ಕಲ್ ಬಳಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿಬಂದಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-drunkards-block-ksrtc-bus-for-selfie-midnight-rowdyism-sat/articleshow-8kqav69"/>
        </item>
        <item>
            <title><![CDATA[ಜೆಡಿಎಸ್ ಎಲ್ಲಿದೆ ಎಂಬ ಟೀಕೆಗೆ ಸೇರಿರುವ ಸಾವಿರಾರು ಜನರೇ ಸಾಕ್ಷಿ: ನಿಖಿಲ್ ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/nikhil-kumaraswamy-jds-kadur-rally-membership-drive-gvd/articleshow-b199tad</link>
            <guid isPermaLink="true">https://kannada.asianetnews.com/karnataka-districts/nikhil-kumaraswamy-jds-kadur-rally-membership-drive-gvd/articleshow-b199tad</guid>
            <pubDate>Mon, 20 Apr 2026 17:38:27 +0530</pubDate>
            <description><![CDATA[&lt;p&gt;ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಟೀಕಿಸುವವರಿಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರೇ ಸಾಕ್ಷಿಯಾಗಿದ್ದಾರೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jdyxfep0fmty5zj9fgq4yphm,imgname--.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕಡೂರು (ಏ.20): &lt;/strong&gt;ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಟೀಕಿಸುವವರಿಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರೇ ಸಾಕ್ಷಿಯಾಗಿದ್ದಾರೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಕಡೂರು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಜೆಡಿಎಸ್ ಪಕ್ಷದ ಸಮಾವೇಶ ಮತ್ತು ಸದಸ್ಯತ್ವ ಅಭಿಯಾನ ಉಧ್ಘಾಟಿಸಿ ಮಾತನಾಡಿ ಇಂದಿನ ಕಾರ್ಯಕ್ರಮಕ್ಕೆ ಕಡೂರು ಕ್ಷೇತ್ರದ ಜನರನ್ನು ಅಪಾರ ಸಂಖ್ಯೆಯಲ್ಲಿ ಸೇರಿಸಿ ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿರುವ ವೈಎಸ್ .ವಿ ದತ್ತಣ್ಣ ಮತ್ತು ಚೇತನ್ ಕೆಂಪರಾಜ್ ಹಾಗೂ ಕಾರ್ಯಕರ್ತರಿಗೆ ಪ್ರಣಾಮ ಸಲ್ಲಿಸುತ್ತೇನೆ.&lt;/p&gt;&lt;p&gt;ಚಿಕ್ಕಮಗಳೂರು,ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರು ಗೆಲ್ಲಲು ಸದಾ ನಿಮ್ಮ ಜೊತೆ ಇರುತ್ತೇನೆ. ಜೆಡಿಎಸ್ ಪಕ್ಷವು ರಾಜ್ಯದ 7.50 ಕೋಟಿ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದು. ಈ ಬಾರಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಗೆ ಟಿಕೇಟ್ ನೀಡಲಿದೆ ಎಂದರು.&lt;/p&gt;&lt;p&gt;ಕಷ್ಟ ಕಾಲದಲ್ಲಿ ದತ್ತಣ್ಣ ಕಡೂರು ಕ್ಷೇತ್ರದಲ್ಲಿ ಬಾವುಟ ಕಟ್ಟಿ ಪಕ್ಷ ಸಂಘಟಿಸಿ ಶಾಸಕರಾದರು. ಸೋತಾಗಲು ಪಕ್ಷ ದತ್ತರವನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತು. ದೇವೇಗೌಡರು ಈ ಭಾಗದಲ್ಲಿ ಸಂಸದರಾದ ಅವಧಿಯಲ್ಲಿ ₹1400 ಕೋಟಿ ತರುವ ಮೂಲಕ ನೀರಾವರಿಗೆ ಆದ್ಯತೆ ನೀಡಿದ್ದಾರೆ. ಪಕ್ಷದ ಸದಸ್ಯತ್ವ ಮಾಡಲು ಮುಖಂಡರು ಮುಂದಾಗಬೇಕು ಎಂದರು.&lt;/p&gt;&lt;h2&gt;&lt;strong&gt;ನಮಗೆ ಸಂತಸ ತಂದಿದೆ&lt;/strong&gt;&lt;/h2&gt;&lt;p&gt;ಮಾಜಿ ಶಾಸಕ ವೈ, ಎಸ್ ವಿ.ದತ್ತ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಯುವಕರ ಆಕರ್ಷಣೆ ಮತ್ತು ಸಂಘಟನೆ ಕೂಡ ಬಲವಾಗಿದೆ. ಯುವಕ ಚೇತನ್ ಕೆಂಪರಾಜು ದೂರಿದಂತೆ ಕಾಂಗ್ರೆಸ್ ಪಕ್ಷದಿಂದ ಕಿರುಕುಳ ಹೆಚ್ಚಾಗಿದೆ. 2005ರಲ್ಲಿ ಬಾವುಟ ಕಟ್ಟಲು ಹೆದರುತ್ತಿದ್ದ ಸಮಯದಲ್ಲಿ ನಾನು ಪಕ್ಷದ ಬಾವುಟ ಕಟ್ಟಿ 1200 ಕಿಮೀ. ಪಾದಯಾತ್ರೆ ಮಾಡಿ ಜನರ ಹೋರಾಟದ ಧ್ವನಿಯಾಗಿ ಹಿಂದುಳಿದ ಎಲ್ಲ ಸಮಾಜಗಳ ಬೆಂಬಲದಿಂದ ಶಾಸಕನಾಗಿ ಕೆಲಸ ಮಾಡಿದ್ದೇನೆ. ಈದೀಗ ಕಡೂರು ಕ್ಷೇತ್ರದಲ್ಲಿ ನನಗೆ ಶಕ್ತಿಯಾಗಿ ನಿಖಿಲ್ ಬಂದಿರುವುದು ನಮಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಜೊತೆ ಇರುತ್ತೇನೆ ಎಂದರು.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/nikhil-kumaraswamy-jds-kadur-rally-membership-drive-gvd/articleshow-b199tad"/>
        </item>
        <item>
            <title><![CDATA[ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕರಿಗೆ ದೈವದಂತೆ ಬಂದ ಶಾಸಕಿ: ನಯನಾ ಮೋಟಮ್ಮ ಮಾನವೀಯತೆಗೆ ಸಾರ್ವಜನಿಕರ ಹ್ಯಾಟ್ಸಾಫ್!]]></title>
            <link>https://kannada.asianetnews.com/karnataka-districts/mudigere-mla-nayana-motamma-rescues-accident-victims-humanity-chikkamagaluru-sat/articleshow-dp1rpow</link>
            <guid isPermaLink="true">https://kannada.asianetnews.com/karnataka-districts/mudigere-mla-nayana-motamma-rescues-accident-victims-humanity-chikkamagaluru-sat/articleshow-dp1rpow</guid>
            <pubDate>Sun, 26 Apr 2026 20:38:36 +0530</pubDate>
            <description><![CDATA[ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಮಳೆಯಿಂದಾಗಿ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಸಾಗುತ್ತಿದ್ದ ಶಾಸಕಿ ನಯನಾ ಮೋಟಮ್ಮ, ತಮ್ಮ ಕಾರಿನಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kq55bhm3039h88mpd1d0fny2,imgname-nayana-motamma-1777216112259.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.26): ಮ&lt;/strong&gt;ಳೆಗಾಲದ ಆರಂಭದಲ್ಲೇ ಮಲೆನಾಡಿನ ರಸ್ತೆಗಳು ಅಪಾಯಕಾರಿಯಾಗಿ ಪರಿಣಮಿಸುತ್ತಿವೆ. ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪ ಇಂದು ನಡೆದ ಭೀಕರ ಕಾರು ಅಪಘಾತದಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಇಬ್ಬರು ಯುವಕರನ್ನು ಸ್ವತಃ ಶಾಸಕಿ ನಯನಾ ಮೋಟಮ್ಮ ಅವರೇ ಆಸ್ಪತ್ರೆಗೆ ದಾಖಲಿಸುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಇಂದು ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಜಾರುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡು, ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅತಿಯಾದ ರಕ್ತಸ್ರಾವವಾಗುತ್ತಿದ್ದರಿಂದ ಯುವಕರ ಸ್ಥಿತಿ ಅತ್ಯಂತ ಗಂಭೀರವಾಗಿತ್ತು.&lt;/p&gt;&lt;h2&gt;&lt;strong&gt;ರಕ್ಷಕಿಯಾಗಿ ಬಂದ ಶಾಸಕಿ:&lt;/strong&gt;&lt;/h2&gt;&lt;p&gt;ಅದೇ ಸಮಯದಲ್ಲಿ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಶಾಸಕಿ ನಯನಾ ಮೋಟಮ್ಮ ಅವರು ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಅಪಘಾತವಾಗಿರುವುದನ್ನು ಕಂಡ ಶಾಸಕಿ, ಕ್ಷಣಾರ್ಧವೂ ತಡಮಾಡದೆ ತಮ್ಮ ಕಾರನ್ನು ನಿಲ್ಲಿಸಿ ಗಾಯಾಳುಗಳ ನೆರವಿಗೆ ಧಾವಿಸಿದರು. ಆಂಬುಲೆನ್ಸ್&zwnj;ಗಾಗಿ ಕಾಯದೆ, ಗಂಭೀರವಾಗಿ ಗಾಯಗೊಂಡಿದ್ದ ಯುವಕರನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ಆಸ್ಪತ್ರೆಗೆ ಧಾವಿಸಿದರು.&lt;/p&gt;&lt;h3&gt;&lt;strong&gt;ರಕ್ತಮಯವಾದ ಶಾಸಕರ ಕಾರು:&lt;/strong&gt;&lt;/h3&gt;&lt;p&gt;ಯುವಕರಿಗೆ ತೀವ್ರ ಗಾಯಗಳಾಗಿದ್ದರಿಂದ ಶಾಸಕರ ಕಾರು ಸಂಪೂರ್ಣವಾಗಿ ರಕ್ತಮಯವಾಗಿತ್ತು. ಆದರೂ ಯಾವುದನ್ನೂ ಲೆಕ್ಕಿಸದ ನಯನಾ ಮೋಟಮ್ಮ, ಗಾಯಾಳುಗಳನ್ನು ಬಣಕಲ್ ಗ್ರಾಮದ ಕೃಷ್ಣ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದರು. ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.&lt;/p&gt;&lt;h3&gt;&lt;strong&gt;ಸಾರ್ವಜನಿಕರ ಮೆಚ್ಚುಗೆ:&lt;/strong&gt;&lt;/h3&gt;&lt;p&gt;ಸಾಮಾನ್ಯವಾಗಿ ವಿವಿಐಪಿಗಳು ತಮ್ಮ ಕಾರು ಹಾಳಾಗುತ್ತದೆ ಅಥವಾ ರಕ್ತವಾಗುತ್ತದೆ ಎಂದು ಇಂತಹ ಸಂದರ್ಭಗಳಲ್ಲಿ ದೂರ ಉಳಿಯುತ್ತಾರೆ. ಆದರೆ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಅಧಿಕಾರ ಮತ್ತು ಪ್ರತಿಷ್ಠೆಯನ್ನು ಬದಿಗೊತ್ತಿ, ಪ್ರಾಣ ಉಳಿಸುವುದೇ ಮುಖ್ಯ ಎಂದು ಭಾವಿಸಿ ನಡೆದುಕೊಂಡ ರೀತಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. 'ಜನಪ್ರತಿನಿಧಿ ಎಂದರೆ ಹೀಗಿರಬೇಕು' ಎಂದು ಸ್ಥಳೀಯರು ಶ್ಲಾಘಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/mudigere-mla-nayana-motamma-rescues-accident-victims-humanity-chikkamagaluru-sat/articleshow-dp1rpow"/>
        </item>
        <item>
            <title><![CDATA[ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದವರಿಗೆ ಶಾಕ್, ಮೂಗುತಿ ತೆಗೆಯಲಾಗದ ವಿದ್ಯಾರ್ಥಿನಿಯರಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ!]]></title>
            <link>https://kannada.asianetnews.com/karnataka-districts/chikkamagaluru-cet-staff-use-gum-tape-on-female-students-nose-pins-to-prevent-exam-malpractice-rav/articleshow-e352oep</link>
            <guid isPermaLink="true">https://kannada.asianetnews.com/karnataka-districts/chikkamagaluru-cet-staff-use-gum-tape-on-female-students-nose-pins-to-prevent-exam-malpractice-rav/articleshow-e352oep</guid>
            <pubDate>Thu, 23 Apr 2026 12:00:03 +0530</pubDate>
            <description><![CDATA[ಚಿಕ್ಕಮಗಳೂರಿನ MES ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ, ಮೂಗುತಿ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ ಒಳಗೆ ಕಳುಹಿಸಿದ್ದಾರೆ. ಪರೀಕ್ಷಾ ಅಕ್ರಮ ತಡೆಯುವ ಕಟ್ಟುನಿಟ್ಟಿನ ಕ್ರಮಗಳ ಭಾಗವಾಗಿ ಈ ಘಟನೆ ನಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpwg8x33dfw6wrkdpn71y51x,imgname-untitled-design--6--1776925570147.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.23)&lt;/strong&gt;: ಕಾಫಿನಾಡಿನ ಸಿಇಟಿ ಪರೀಕ್ಷಾ ಕೇಂದ್ರವೊಂದರಲ್ಲಿ ಇಂದು ಅಚ್ಚರಿಯ ಘಟನೆಯೊಂದು ನಡೆದಿದೆ. ಭವಿಷ್ಯದ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ನೂರಾರು ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರವೇಶ ದ್ವಾರದಲ್ಲೇ ಸಿಬ್ಬಂದಿ ಶಾಕ್ ನೀಡಿದ್ದಾರೆ.&lt;/p&gt;&lt;p&gt;ನಗರದ MES ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಮೂಗುತಿ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ ಪರೀಕ್ಷಾ ಕೊಠಡಿಯೊಳಗೆ ಕಳುಹಿಸಿದ್ದಾರೆ. ಮೂಗುತಿ ತೆಗೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯರಿಗೆ ಈ ರೀತಿ ಗಮ್ ಟೇಪ್ ಅಂಟಿಸಿ ಕಳಿಸಿರುವ ಸಿಬ್ಬಂದಿ.&lt;/p&gt;&lt;h2&gt;ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ:&lt;/h2&gt;&lt;p&gt;ರಾಜ್ಯಾದ್ಯಂತ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಡಿಜಿಟಲ್ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದ್ದು, ಪ್ರತಿಯೊಬ್ಬ ಪರೀಕ್ಷಾರ್ಥಿಯನ್ನು ತೀವ್ರ ತಪಾಸಣೆ ನಡೆಸಿಯೇ ಒಳಗೆ ಬಿಡಲಾಗುತ್ತಿದೆ.&lt;/p&gt;&lt;p&gt;ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗಿದೆ. ಕೇವಲ ಹಾಲ್ ಟಿಕೆಟ್ ಮತ್ತು ಗುರುತಿನ ಚೀಟಿ ಪರಿಶೀಲಿಸಿ ಸಿಬ್ಬಂದಿ ವಿದ್ಯಾರ್ಥಿಗಳನ್ನು ಒಳಗೆ ಬಿಡುತ್ತಿದ್ದು, ಪರೀಕ್ಷಾ ಕೇಂದ್ರದ ಮುಂದೆ ವಿದ್ಯಾರ್ಥಿಗಳ ಕಣ್ಣಲ್ಲಿ ಆತಂಕ ಮನೆ ಮಾಡಿದೆ.&lt;/p&gt;]]></content:encoded>
            <category>chikkamagalur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/chikkamagaluru-cet-staff-use-gum-tape-on-female-students-nose-pins-to-prevent-exam-malpractice-rav/articleshow-e352oep"/>
        </item>
        <item>
            <title><![CDATA[ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತಗಳ ಮರು ಎಣಿಕೆ: 'ಸತ್ಯಕ್ಕೆ ಜಯ ಸಿಗಲಿದೆ' ಎಂದ ಶಾಸಕ ಟಿ.ಡಿ. ರಾಜೇಗೌಡ!]]></title>
            <link>https://kannada.asianetnews.com/politics/sringeri-assembly-election-postal-vote-recount-td-rajegowda-asianet-suvrana-news-sat/articleshow-g7s8t71</link>
            <guid isPermaLink="true">https://kannada.asianetnews.com/politics/sringeri-assembly-election-postal-vote-recount-td-rajegowda-asianet-suvrana-news-sat/articleshow-g7s8t71</guid>
            <pubDate>Sat, 18 Apr 2026 08:56:00 +0530</pubDate>
            <description><![CDATA[2023ರ ಶೃಂಗೇರಿ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೈಕೋರ್ಟ್ ಆದೇಶದಿಂದ ಹೊಸ ತಿರುವು ಪಡೆದಿದೆ. ಅಂಚೆ ಮತಗಳ ಎಣಿಕೆಯಲ್ಲಿನ ಅವ್ಯವಹಾರದ ಆರೋಪದ ಮೇಲೆ, ತಿರಸ್ಕೃತ 279 ಮತಗಳ ಮರು ಪರಿಶೀಲನೆಗೆ ನ್ಯಾಯಾಲಯ ಸೂಚಿಸಿದ್ದು, ಇದು ಕ್ಷೇತ್ರದ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpf9z36fjmjnv8skaqfb1qhv,imgname-sringeri-mal-td-rajegowda-1776482749646.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು: ರಾ&lt;/strong&gt;ಜ್ಯ ರಾಜಕೀಯದಲ್ಲಿ ಅತೀವ ಕುತೂಹಲ ಮೂಡಿಸಿದ್ದ 2023ರ ವಿಧಾನಸಭಾ ಚುನಾವಣೆಯ ಶೃಂಗೇರಿ ಕ್ಷೇತ್ರದ ಫಲಿತಾಂಶ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಅಂಚೆ ಮತಗಳ ಎಣಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಾಗಿ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ವಿವಾದಿತ ಅಂಚೆ ಮತಗಳ ಮರು ಪರಿಶೀಲನೆಗೆ ಸೂಚನೆ ನೀಡಿದೆ. ಈ ಬೆಳವಣಿಗೆಯ ಬಳಿಕ ಕ್ಷೇತ್ರದಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಎಲ್ಲರ ಚಿತ್ತ ನ್ಯಾಯಾಲಯದ ಆದೇಶ ಮತ್ತು ಮುಂದಿನ ಬೆಳವಣಿಗೆಯತ್ತ ನೆಟ್ಟಿದೆ.&lt;/p&gt;&lt;h2&gt;&lt;strong&gt;ಹಿನ್ನೆಲೆ ಏನು?&lt;/strong&gt;&lt;/h2&gt;&lt;p&gt;2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಟಿ.ಡಿ. ರಾಜೇಗೌಡರು, ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ.ಎನ್. ಜೀವರಾಜ್ ಅವರ ವಿರುದ್ಧ ಕೇವಲ 201 ಮತಗಳ ಅಂತರದಿಂದ ರೋಚಕ ಜಯ ಸಾಧಿಸಿದ್ದರು. ಆದರೆ ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣಾ ಸಂದರ್ಭದಲ್ಲಿ ನಡೆದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಅವರು ದೂರು ನೀಡಿದ್ದರು. ಒಟ್ಟು 2811 ಅಂಚೆ ಮತಗಳಲ್ಲಿ ಸುಮಾರು 279 ಅಂಚೆ ಮತಗಳನ್ನು ತಿರಸ್ಕರಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಹೈಕೋರ್ಟ್ ಈ 279 ಅಂಚೆ ಮತಗಳ ಮರು ಪರಿಶೀಲನೆಗೆ ಆದೇಶಿಸಿದ್ದು, ಒಂದು ವೇಳೆ ಇದರಲ್ಲಿ ವ್ಯತ್ಯಾಸಗಳು ಕಂಡುಬಂದಲ್ಲಿ ಸಂಪೂರ್ಣ ಅಂಚೆ ಮತಗಳ ಮರು ಎಣಿಕೆ ನಡೆಸುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.&lt;/p&gt;&lt;h2&gt;&lt;strong&gt;ಆಡಳಿತದ ಸಿದ್ಧತೆ:&lt;/strong&gt;&lt;/h2&gt;&lt;p&gt;ಹೈಕೋರ್ಟ್ ಆದೇಶದಂತೆ ಮುಂದಿನ ಎರಡು ವಾರಗಳ ಒಳಗಾಗಿ ಮರು ಎಣಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು, ಸ್ಟೇ ಕೋರಿ ಅರ್ಜಿ ಸಲ್ಲಿಸಲು ಏಪ್ರಿಲ್ 20 ರವರೆಗೆ ಗಡುವು ನೀಡಲಾಗಿದೆ. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ರಿಟರ್ನಿಂಗ್ ಅಧಿಕಾರಿ (RO) ನೇಮಕ ಮಾಡುವಂತೆ ಕೋರಿಕೊಂಡಿದೆ. ಮುಂದಿನ 4 ದಿನಗಳ ಒಳಗಾಗಿ ಚುನಾವಣಾಧಿಕಾರಿ ನೇಮಕವಾಗುವ ಸಾಧ್ಯತೆಯಿದ್ದು, ಬಳಿಕ ಮರು ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.&lt;/p&gt;&lt;h3&gt;&lt;strong&gt;ಶಾಸಕ ಟಿ.ಡಿ. ರಾಜೇಗೌಡರ ಪ್ರತಿಕ್ರಿಯೆ:&lt;/strong&gt;&lt;/h3&gt;&lt;p&gt;ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಟಿ.ಡಿ. ರಾಜೇಗೌಡರು, &quot;ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ&quot; ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಲಭ್ಯವಾಗಿದ್ದರೂ, ಆದೇಶದ ಪೂರ್ಣ ಪ್ರತಿಯನ್ನು ತಮ್ಮ ವಕೀಲರೊಂದಿಗೆ ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ಮುಂದಿನ ಕಾನೂನಾತ್ಮಕ ಹೆಜ್ಜೆ ಇಡುವುದಾಗಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಚುನಾವಣಾ ಸಂದರ್ಭದಲ್ಲಿ ಎಲ್ಲಾ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಅತ್ಯಂತ ಪಾರದರ್ಶಕವಾಗಿ ಮತ ಎಣಿಕೆ ನಡೆದಿದೆ ಎಂಬುದನ್ನು ಈ ವೇಳೆ ನೆನಪಿಸಿಕೊಂಡಿರುವ ಅವರು, ಅರ್ಜಿದಾರರು ಕೇವಲ ಮತ ಎಣಿಕೆಯ ಬಗ್ಗೆ ಮಾತ್ರ ನ್ಯಾಯಾಲಯದ ಮೊರೆ ಹೋಗಿದ್ದರೆ ಅಂದೇ ಸಹಕಾರ ನೀಡುತ್ತಿದ್ದೆವು ಎಂದು ತಿಳಿಸಿದ್ದಾರೆ. ತಮ್ಮ ಮೇಲೆ ಹೊರಿಸಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲೇ ಉತ್ತರ ಸಿಗಲಿದೆ ಎಂದಿರುವ ರಾಜೇಗೌಡರು, ಹಿಂದೆಯೂ ತಾವು ಸೋತಾಗ ಜನರ ಅಭಿವೃದ್ಧಿಗೆ ಅಡ್ಡಿಪಡಿಸದೆ ಕೆಲಸ ಮಾಡಿದ್ದೇವೆ, ಹೀಗಾಗಿ ನ್ಯಾಯಾಲಯದ ಯಾವುದೇ ತೀರ್ಪನ್ನು ಗೌರವಿಸಿ ಸ್ವೀಕರಿಸಲು ತಾವು ಸಿದ್ಧರಿರುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;ಒಟ್ಟಾರೆಯಾಗಿ ಶೃಂಗೇರಿ ಕ್ಷೇತ್ರದ ಈ ಅಂಚೆ ಮತಗಳ ಮರು ಪರಿಶೀಲನೆ ಮುಂಬರುವ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/sringeri-assembly-election-postal-vote-recount-td-rajegowda-asianet-suvrana-news-sat/articleshow-g7s8t71"/>
        </item>
        <item>
            <title><![CDATA[ಕೇರಳ ಬಾಲಕಿ ಆತ್ಮ*ಹತ್ಯೆ ಹಿನ್ನೆಲೆ: ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್, ಕಠಿಣ ಪೊಲೀಸ್ ಬಂದೋಬಸ್ತ್!]]></title>
            <link>https://kannada.asianetnews.com/karnataka-districts/chikkamagaluru-tourist-alert-police-high-alert-safety-measures-gvd/articleshow-gmqfwrv</link>
            <guid isPermaLink="true">https://kannada.asianetnews.com/karnataka-districts/chikkamagaluru-tourist-alert-police-high-alert-safety-measures-gvd/articleshow-gmqfwrv</guid>
            <pubDate>Sat, 18 Apr 2026 17:20:06 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇರಳ ಮೂಲದ ಬಾಲಕಿಯ ಅಸಹಜ ಸಾವಿನ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpg6t96qygv4c90wxqzmbkf9,imgname-bkbk-1776513000663.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಏ.18): &lt;/strong&gt;ಜಿಲ್ಲೆಯಲ್ಲಿ ಕೇರಳ ಮೂಲದ ಬಾಲಕಿಯ ಅಸಹಜ ಸಾವಿನ ಘಟನೆ ಬಳಿಕ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.&lt;/p&gt;&lt;p&gt;&lt;strong&gt;ಪ್ರವಾಸಿತಾಣದಲ್ಲಿ ಪೊಲೀಸರ ನಿಗಾ: &lt;/strong&gt;ಬೇಸಿಗೆ ರಜೆ , ವೀಕೆಂಡ್ ಹಿನ್ನೆಲೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ವಿಶೇಷವಾಗಿ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಮಾಣಿಕ್ಯಾಧಾರ ಪ್ರದೇಶಗಳಲ್ಲಿ ಭಾರೀ ಜನಸಾಗರ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ. ಚಂದ್ರದ್ರೋಣ ಪರ್ವತಶ್ರೇಣಿ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ. ಕಂದಕಗಳು, ಜಲಪಾತಗಳು ಮತ್ತು ಎತ್ತರದ ಪರ್ವತ ಪ್ರದೇಶಗಳಲ್ಲಿ ಪ್ರವಾಸಿಗರು ನಿರ್ಲಕ್ಷ್ಯ ತೋರಬಾರದು ಎಂಬ ಉದ್ದೇಶದಿಂದ ಪೊಲೀಸರ ತಂಡಗಳು ಹದ್ದಿನ ಕಣ್ಣಿನ ನಿಗಾವಹಿಸುತ್ತಿವೆ.&lt;/p&gt;&lt;h2&gt;&lt;strong&gt;ಪಿಎಸ್ ಐ ನೇತೃತ್ವದಲ್ಲಿ ಭದ್ರತೆ&lt;/strong&gt;&lt;/h2&gt;&lt;p&gt;ದತ್ತಪೀಠ&ndash;ಮಾಣಿಕ್ಯಾಧಾರ ತಪ್ಪಲು ಪ್ರದೇಶದಲ್ಲಿ ಪಿ.ಎಸ್.ಐ. ನೇತೃತ್ವದಲ್ಲಿ ನಾಲ್ವರು ಪೊಲೀಸರನ್ನು ಶಾಶ್ವತವಾಗಿ ನಿಯೋಜಿಸಲಾಗಿದೆ. ಜೊತೆಗೆ ಚಿಕ್ಕಮಗಳೂರು ವಿಭಾಗದ 15 ಪೊಲೀಸ್ ಠಾಣೆಗಳ ಪಿ.ಎಸ್.ಐ.ಗಳು ಪರ್ಯಾಯವಾಗಿ ಪ್ರತಿದಿನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ಠಾಣೆಯಿಂದ ಕೆಲ ಸಿಬ್ಬಂದಿಯನ್ನು ವಾರಪೂರ್ತಿ ಅಲ್ಲಿಯೇ ಮೊಕ್ಕಾಂ ಹಾಕುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ 24 ಗಂಟೆಗಳ ಭದ್ರತೆ ಒದಗಿಸಲಾಗುತ್ತಿದೆ.&lt;/p&gt;&lt;p&gt;ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿರಂತರ ಗಸ್ತು ನಡೆಸಲಾಗುತ್ತಿದ್ದು, ನಿಯಮ ಉಲ್ಲಂಘಿಸುವ ಪ್ರವಾಸಿಗರಿಗೆ ಸ್ಥಳದಲ್ಲೇ ಎಚ್ಚರಿಕೆ ನೀಡಲಾಗುತ್ತಿದೆ. ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಅತಿರೇಕದ ಸಾಹಸ ಚಟುವಟಿಕೆಗಳಲ್ಲಿ ತೊಡಗುವುದು ಮುಂತಾದ ವರ್ತನೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯವಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಿ, ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chikkamagaluru-tourist-alert-police-high-alert-safety-measures-gvd/articleshow-gmqfwrv"/>
        </item>
        <item>
            <title><![CDATA[SSLCಯಲ್ಲಿ ಟೈಲರ್ ಮಗಳು ಇಂದು ರಾಜ್ಯಕ್ಕೆ ಟಾಪರ್: ಕಾಫಿನಾಡಿನ ಬೃಂದಾ ಜಿಲ್ಲೆಗೆ ಮಾತ್ರವಲ್ಲ, ಇಡೀ ರಾಜ್ಯಕ್ಕಿ ಕೀರ್ತಿ!]]></title>
            <link>https://kannada.asianetnews.com/education/sslc-topper-brinda-625-marks-chikkamagaluru-st-marys-school-gvd/articleshow-pdnu8vv</link>
            <guid isPermaLink="true">https://kannada.asianetnews.com/education/sslc-topper-brinda-625-marks-chikkamagaluru-st-marys-school-gvd/articleshow-pdnu8vv</guid>
            <pubDate>Thu, 23 Apr 2026 18:29:26 +0530</pubDate>
            <description><![CDATA[&lt;p&gt;ಎಸ್ಎಸ್ಎಲ್&zwnj;ಸಿ ಫಲಿತಾಂಶದಲ್ಲಿ ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಬೃಂದಾ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿ ಕಾಫಿನಾಡಿಗೆ ಕೀರ್ತಿ ತಂದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpx6rncre90f7vqqy30vxtph,imgname-nvvmv-1776949155224.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಏ.23):&lt;/strong&gt; ರಾಜ್ಯದ ಎಸ್ಎಸ್ಎಲ್&zwnj;ಸಿ ಫಲಿತಾಂಶದಲ್ಲಿ ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಬೃಂದಾ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿ ಕಾಫಿನಾಡಿಗೆ ಕೀರ್ತಿ ತಂದಿದ್ದಾರೆ. ಬೃಂದಾ ಅವರ ಈ ಐತಿಹಾಸಿಕ ಸಾಧನೆಯ ಹಿಂದೆ ತಂದೆಯ ಕಠಿಣ ದುಡಿಮೆ ಮತ್ತು ತಾಯಿಯ ನಿರಂತರ ಪ್ರಾರ್ಥನೆಯ ಬೆಂಬಲವಿದೆ.&lt;/p&gt;&lt;p&gt;&lt;strong&gt;ಹೆತ್ತವರ ಕನಸು ನನಸು: &lt;/strong&gt;ಟೈಲರಿಂಗ್ ವೃತ್ತಿ ಮಾಡುತ್ತಿರುವ ಬೃಂದಾ ಅವರ ತಂದೆ ಮಂಜುನಾಥ್ ಮಗಳ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ್ದು, ಇಂದು ಮಗಳ ಸಾಧನೆಯಿಂದ ಅವರ ಪರಿಶ್ರಮಕ್ಕೆ ಸಾರ್ಥಕತೆ ಸಿಕ್ಕಂತಾಗಿದೆ. ಒಬ್ಬಳೆ ಮಗಳನ್ನು ಕಷ್ಟಪಟ್ಟು ಖಾಸಗಿ ಶಾಲೆಯಾದ ಸೆಂಟ್ ಮೇರಿಸ್ ನಲ್ಲಿ ಓದಿಸುತ್ತಿದ್ದರು.&lt;/p&gt;&lt;p&gt;ತಾಯಿ ಹರ್ಷಿಣಿ ಅವರು ಮಾತನಾಡುತ್ತಾ, ಮಗಳು ಎಲ್ಕೆಜಿಯಿಂದಲೂ ಓದಿನಲ್ಲಿ ಮುಂದಿದ್ದರೂ ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೇ ಪ್ರಥಮ ಬರಬೇಕೆಂಬುದು ಮಗಳು ಮತ್ತು ಶಾಲೆಯ ದೊಡ್ಡ ಕನಸಾಗಿತ್ತು, ಅದು ಇಂದು ನನಸಾಗಿದೆ ಎಂದು ಭಾವುಕರಾಗಿ ನುಡಿದರು. ಯಾವುದೇ ಪಠ್ಯವನ್ನು ಬಾಯಿಪಾಠ ಮಾಡದೆ, ವಿಷಯವನ್ನು ಅರ್ಥೈಸಿಕೊಂಡು ಓದುತ್ತಿದ್ದ ಬೃಂದಾ ಅವರ ಯಶಸ್ಸಿನಲ್ಲಿ ಶಾಲೆಯ ಶಿಕ್ಷಕರು ಹಾಗೂ ಗುರುಗಳಾದ ಮೀರಾ ಮತ್ತು ನಾಗೇಂದ್ರ ಅವರ ಮಾರ್ಗದರ್ಶನ ಬಹುಮುಖ್ಯವಾಗಿದೆ ಎಂದು ಅವರು ಸ್ಮರಿಸಿದರು.&lt;/p&gt;&lt;h2&gt;&lt;strong&gt;ಇಂಜಿನಿಯರ್ ಆಗುವ ಗುರಿ&lt;/strong&gt;&lt;/h2&gt;&lt;p&gt;ಬೃಂದಾ ಅವರು ತಮ್ಮ ಯಶಸ್ಸಿನ ಬಗ್ಗೆ ಮಾತನಾಡುತ್ತಾ, ಪೋಷಕರು, ಶಿಕ್ಷಕರು ಮತ್ತು ಶಾಲಾ ಮ್ಯಾನೇಜ್ಮೆಂಟ್ ನೀಡಿದ ಪ್ರೋತ್ಸಾಹವೇ ಈ ಸಾಧನೆಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ. ಶಾಲೆಯಲ್ಲಿ ನೀಡುತ್ತಿದ್ದ ವಿಶೇಷ ತರಬೇತಿ ಹಾಗೂ ಎಕ್ಸ್ಟ್ರಾ ಮೆಟೀರಿಯಲ್ಸ್&zwnj;ಗಳು ಕಲಿಕೆಗೆ ಸಹಕಾರಿಯಾಗಿದ್ದವು ಎಂದು ತಿಳಿಸಿದರು.&lt;/p&gt;&lt;p&gt;ಅಲ್ಲದೇ ಮುಂದೆ ಇಂಜಿನಿಯರ್ ಆಗುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ. ಶಾಲೆಯ ಮುಖ್ಯಸ್ಥರಾದ ಜೆರಾಲ್ಡ್ ಲೋಬೋ ಅವರು ಇಡೀ ತಂಡದ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಿದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಬೃಂದಾ ಅವರ ತಾಯಿ, ಸೋಲಿಗೆ ಅಂಜದೆ ತಮಗೆ ತಾವೇ ಚಾಲೆಂಜ್ ಹಾಕಿಕೊಂಡು ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/education/sslc-topper-brinda-625-marks-chikkamagaluru-st-marys-school-gvd/articleshow-pdnu8vv"/>
        </item>
        <item>
            <title><![CDATA[ಯಗಚಿ ಹಳ್ಳಕ್ಕೆ ಸೇರುತ್ತಿದೆ ಕಲುಷಿತ ನೀರು: ಪತ್ರಕರ್ತನ ದೂರಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ]]></title>
            <link>https://kannada.asianetnews.com/karnataka-districts/chikkamagaluru-yagachi-halla-pollution-pmo-orders-probe-gvd/articleshow-q7kgu57</link>
            <guid isPermaLink="true">https://kannada.asianetnews.com/karnataka-districts/chikkamagaluru-yagachi-halla-pollution-pmo-orders-probe-gvd/articleshow-q7kgu57</guid>
            <pubDate>Sun, 26 Apr 2026 16:32:07 +0530</pubDate>
            <description><![CDATA[&lt;p&gt;ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಚಿಕ್ಕಮಗಳೂರಿನ ರಾಮೇಶ್ವರ ಬಡಾವಣೆಯಲ್ಲಿರುವ ಈ ಹಳ್ಳದ ನೀರು ನೇರವಾಗಿ ಯಗಚಿ ಡ್ಯಾಂ ಸೇರುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq4q7ztcyydvv3pazcvnfcp6,imgname-vhjcj-1777201315660.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು&lt;/strong&gt;&lt;/p&gt;&lt;p&gt;&lt;strong&gt;ಚಿಕ್ಕಮಗಳೂರು (ಏ.26): &lt;/strong&gt;ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಚಿಕ್ಕಮಗಳೂರಿನ ರಾಮೇಶ್ವರ ಬಡಾವಣೆಯಲ್ಲಿರುವ ಈ ಹಳ್ಳದ ನೀರು ನೇರವಾಗಿ ಯಗಚಿ ಡ್ಯಾಂ ಸೇರುತ್ತಿದ್ದು, ಕುಡಿಯುವ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರಲ್ಲಿ ತೀವ್ರ ಆತಂಕ ಮನೆಮಾಡಿದೆ.&lt;/p&gt;&lt;p&gt;&lt;strong&gt;ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ದೂರು:&lt;/strong&gt; ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪತ್ರಕರ್ತ ದಿನೇಶ್ ಪಟವರ್ಧನ್ ಅವರು ಪ್ರಧಾನಿ ಕಚೇರಿಗೆ ಪತ್ರ ಬರೆದು ದೂರು ನೀಡಿದ್ದರು. ಈ ದೂರಿಗೆ ತಕ್ಷಣ ಸ್ಪಂದಿಸಿರುವ ಪ್ರಧಾನಿ ಕಚೇರಿಯು, ಕೂಡಲೇ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಗರದ ರಾಮೇಶ್ವರ ದೇವಸ್ಥಾನದ ಸಮೀಪವೇ ಈ ಕೊಳಚೆ ನೀರು ಹರಿಯುತ್ತಿರುವುದರಿಂದ ಇಡೀ ಪ್ರದೇಶದಲ್ಲಿ ದುರ್ವಾಸನೆ ಹರಡಿದ್ದು, ಪರಿಸರ ಮಾಲಿನ್ಯ ಉಂಟಾಗಿದೆ. ಇದರಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಮುಕ್ತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಜನರು&lt;/strong&gt;&lt;/h2&gt;&lt;p&gt;ಕಲುಷಿತ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಯಗಚಿ ಹಳ್ಳವನ್ನು ತಕ್ಷಣ ಸ್ವಚ್ಛಗೊಳಿಸಬೇಕೆಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಕಚೇರಿಯ ಮಧ್ಯಪ್ರವೇಶದಿಂದಾಗಿ ಈಗಲಾದರೂ ಹಳ್ಳಕ್ಕೆ ಮುಕ್ತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chikkamagaluru-yagachi-halla-pollution-pmo-orders-probe-gvd/articleshow-q7kgu57"/>
        </item>
        <item>
            <title><![CDATA[ಚಿಕ್ಕಮಗಳೂರು 9 ಎಕರೆ ಸರ್ಕಾರಿ ಜಮೀನು ಅಕ್ರಮ ಮಂಜೂರು; ಮೃತ ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR!]]></title>
            <link>https://kannada.asianetnews.com/karnataka-districts/chikkamagaluru-mudigere-9-acre-illegal-land-scam-fir-against-retired-tahsildar-sat/articleshow-qhvhkpx</link>
            <guid isPermaLink="true">https://kannada.asianetnews.com/karnataka-districts/chikkamagaluru-mudigere-9-acre-illegal-land-scam-fir-against-retired-tahsildar-sat/articleshow-qhvhkpx</guid>
            <pubDate>Fri, 24 Apr 2026 14:53:47 +0530</pubDate>
            <description><![CDATA[&lt;p&gt;ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬೃಹತ್ ಭೂ ಹಗರಣವೊಂದು ಬಯಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಲಾಗಿದೆ. ಮೃತ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpzcrmzje45rvwed9w2ps1g9,imgname-chikkamagaluru-tahashildar-1777022555122.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.24): ಕಾ&lt;/strong&gt;ಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ಭೂ ಹಗರಣ ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ನಿವೃತ್ತ ತಹಶೀಲ್ದಾರ್ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h3&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h3&gt;&lt;p&gt;ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ದೇವವೃಂದ ಗ್ರಾಮದಲ್ಲಿ ಈ ಅಕ್ರಮ ನಡೆದಿದೆ. ದೇವವೃಂದ ಗ್ರಾಮದ ಸರ್ವೆ ನಂಬರ್ 313ರ ಹೆಚ್.4 ಮತ್ತು ಹೆಚ್.5 ರಲ್ಲಿರುವ ಸುಮಾರು 9 ಎಕರೆ ಸರ್ಕಾರಿ ಜಮೀನನ್ನು ಅಧಿಕಾರಿಗಳು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಪಾಲಾಗುವಂತೆ ಮಾಡಿದ್ದಾರೆ. 2018-19ನೇ ಇಸವಿಯಲ್ಲಿ ಈ ಭೂ ಮಂಜೂರಾತಿ ಪ್ರಕ್ರಿಯೆ ನಡೆದಿದ್ದು, ಈಗ ಇದರ ಅಸಲಿಯತ್ತು ಬಯಲಾಗಿದೆ.&lt;/p&gt;&lt;h2&gt;&lt;strong&gt;ಅಕ್ರಮದ ಹಾದಿ ಹೀಗಿತ್ತು:&lt;/strong&gt;&lt;/h2&gt;&lt;p&gt;ಅಚ್ಚರಿಯ ವಿಷಯವೆಂದರೆ, ಈ ಜಮೀನು ಪಡೆಯಲು ಸಂಬಂಧಪಟ್ಟ ವ್ಯಕ್ತಿಗಳು ನಿಯಮಾನುಸಾರ ಯಾವುದೇ ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಆದರೂ ಅಧಿಕಾರಿಗಳು ದಾಖಲೆಗಳನ್ನು ತಿರುಚಿ, ಬೇರೆ ಯಾವುದೋ ಕಡತದಲ್ಲಿದ್ದ ಸಾಗುವಳಿ ಚೀಟಿಗಳನ್ನು ಈ ಪ್ರಕರಣಕ್ಕೆ ಅಪ್&zwnj;ಲೋಡ್ ಮಾಡಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ನೇರವಾಗಿ ಖಾತೆ (ಖಾತಾ) ಮಾಡುವ ಮೂಲಕ ಸರ್ಕಾರದ ಆಸ್ತಿಯನ್ನು ಲೂಟಿ ಹೊಡೆಯಲು ಸಹಕರಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.&lt;/p&gt;&lt;h2&gt;&lt;strong&gt;ಸತ್ತವರ ಮೇಲೂ ಕೇಸ್!&lt;/strong&gt;&lt;/h2&gt;&lt;p&gt;ಈ ಭೂ ಹಗರಣದಲ್ಲಿ ಅಂದಿನ ತಹಶೀಲ್ದಾರ್ ಸೇರಿದಂತೆ ಒಟ್ಟು ನಾಲ್ವರು ಅಧಿಕಾರಿಗಳ ಕೈವಾಡ ಇರುವುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಈ ನಾಲ್ವರ ಪೈಕಿ ಓರ್ವ ನಿವೃತ್ತ ತಹಶೀಲ್ದಾರ್ ಈಗಾಗಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಪ್ರಸ್ತುತ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಅವರು ನೀಡಿದ ದೂರಿನ ಮೇರೆಗೆ, ಮೃತಪಟ್ಟ ಅಧಿಕಾರಿಯನ್ನೂ ಒಳಗೊಂಡಂತೆ ನಾಲ್ವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆಯ ಅಡಿಯಲ್ಲಿ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಫಲಾನುಭವಿಗಳು ಯಾರು?&lt;/strong&gt;&lt;/h3&gt;&lt;p&gt;ಅಕ್ರಮವಾಗಿ ಈ 9 ಎಕರೆ ಜಮೀನನ್ನು ನಿಕೇಶ್ ಪೆರೇರಾ ಮತ್ತು ಅನಿಶ್ ಪೆರೇರಾ ಎಂಬುವರಿಗೆ ಮಂಜೂರು ಮಾಡಲಾಗಿತ್ತು ಎನ್ನಲಾಗಿದೆ. ಅರ್ಹತೆ ಇಲ್ಲದಿದ್ದರೂ ಮತ್ತು ಯಾವುದೇ ಅರ್ಜಿ ಸಲ್ಲಿಸದಿದ್ದರೂ ಅಧಿಕಾರಿಗಳ ಬೆಂಬಲದೊಂದಿಗೆ ಈ ವ್ಯಕ್ತಿಗಳು ಸರ್ಕಾರಿ ಭೂಮಿಯನ್ನು ತಮ್ಮದಾಗಿಸಿಕೊಂಡಿದ್ದರು. ಪ್ರಸ್ತುತ ತಹಶೀಲ್ದಾರ್ ಅಶ್ವಿನಿ ಅವರು ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.&lt;/p&gt;&lt;p&gt;ಸರ್ಕಾರಿ ಜಮೀನುಗಳನ್ನು ಸಂರಕ್ಷಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಅಧಿಕಾರಿಗಳೇ ಕಳ್ಳಾಟವಾಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>chikkamagalur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chikkamagaluru-mudigere-9-acre-illegal-land-scam-fir-against-retired-tahsildar-sat/articleshow-qhvhkpx"/>
        </item>
        <item>
            <title><![CDATA[ಕಾಫಿನಾಡಲ್ಲಿ ಅರಳಿದ ಅಪರೂಪದ ಪ್ರೇಮ ಕಾವ್ಯ: ಜಾತಿ ಸಂಕೋಲೆ ಮೀರಿ ದಲಿತ ಹುಡುಗಿ ಕೈ ಹಿಡಿದ ಬ್ರಾಹ್ಮಣ ಸಮುದಾಯದ ಯುವಕ]]></title>
            <link>https://kannada.asianetnews.com/gallery/relationship/chikkamagaluru-brahmin-community-man-crossed-the-caste-barrier-marries-a-dalit-girl-r54hh47</link>
            <guid isPermaLink="true">https://kannada.asianetnews.com/gallery/relationship/chikkamagaluru-brahmin-community-man-crossed-the-caste-barrier-marries-a-dalit-girl-r54hh47</guid>
            <pubDate>Fri, 24 Apr 2026 10:58:19 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ, ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಮತ್ತು ಪರಿಶಿಷ್ಟ ಸಮುದಾಯದ ಯುವತಿ ಸಾವಿತ್ರಿ ಜಾತಿ ಸಂಕೋಲೆ ಮೀರಿ ಪ್ರೀತಿಸಿ ವಿವಾಹವಾಗಿದ್ದಾರೆ. ಬೌದ್ಧ ಸಂಘಟನೆಯು ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpyz3pbt83k6qms4psh0yy47,imgname-chikkamagaluru-special-marriage-1777008236922.jpg" type="image/jpeg" height="390" width="690"/>
            <content:encoded><![CDATA[ಚಿಕ್ಕಮಗಳೂರಿನಲ್ಲಿ, ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಮತ್ತು ಪರಿಶಿಷ್ಟ ಸಮುದಾಯದ ಯುವತಿ ಸಾವಿತ್ರಿ ಜಾತಿ ಸಂಕೋಲೆ ಮೀರಿ ಪ್ರೀತಿಸಿ ವಿವಾಹವಾಗಿದ್ದಾರೆ. ಬೌದ್ಧ ಸಂಘಟನೆಯು ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.&lt;img&gt;&lt;p&gt;ಚಿಕ್ಕಮಗಳೂರು :ಕಾಫಿನಾಡಲ್ಲೊಂದು ಅಪರೂಪದ ಮದುವೆ ನಡೆದಿದೆ. ಜಾತಿ ಸಂಕೋಲೆ ಮೀರಿ ಬ್ರಾಹ್ಮಣ ಸಮುದಾಯದ ಯುವಕನೋರ್ವ ಪರಿಶಿಷ್ಟ ಸಮುದಾಯದ ಯುವತಿಯ ಕೈ ಹಿಡಿದಿದ್ದಾರೆ. ಬೌದ್ಧ ಸಂಘಟನೆ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಈ ಮದುವೆ ನಡೆದಿದ್ದು, ನವಜೋಡಿಗೆ ಜನ ಶುಭಹಾರೈಸಿದ್ದಾರೆ.&lt;/p&gt;&lt;img&gt;&lt;p&gt;ಸಾಮಾನ್ಯವಾಗಿ ಯುವಕರು ಪ್ರೀತಿಸುವ ವೇಳೆ ಜಾತಿ ಧರ್ಮ ನೋಡುವುದಿಲ್ಲ, ಆದರೆ ಮದುವೆ ವಿಚಾರ ಬಂದಾಗ ಜಾತಿಯ ನೆಪ ಹೇಳಿ ಅನೇಕರು ದೂರಾಗುತ್ತಾರೆ. ಅಥವಾ ಆಸ್ತಿ ಅಂತಸ್ತಿ ಅಂತರದ ಕಾರಣ್ಕೆ ಅಥವಾ ಅಪ್ಪ ಅಮ್ಮ ಸಂಬಂಧಿಕರು ಒಪ್ಪುವುದಿಲ್ಲ ಎಂದು ನೆಪ ಹೇಳಿ ದೂರಾಗುತ್ತಾರೆ. ಆದರೆ ಇಲ್ಲಿ ಸಚಿನ್ ಅವರು ಪ್ರೀತಿಸಿದ ಹುಡುಗಿಯ ಜಾತಿ ನೋಡದೇ ಕೈ ಹಿಡಿದಿದ್ದಾರೆ.&lt;/p&gt;&lt;img&gt;&lt;p&gt;ಸಾವಿತ್ರಿಯವರು ಎಟಿಎಂನಿಂದ ಹಣ ತೆಗೆಯುವುದಕ್ಕೆ ಹೋದಾಗ ಅವರಿಗೆ ಸಚಿನ್ ಪರಿಚಯವಾಗಿದ್ದಾರೆ. ಸಚಿನ್ ಕೂಡ ಎಟಿಎಂಗೆ ಹಣ ತೆಗೆದುಕೊಳ್ಳುವುದಕ್ಕೆ ಬಂದಿದ್ದರು. ಎಟಿಎಂನಲ್ಲಿ ಹಣ ಬಿಡಿಸುವುದಕ್ಕೆ ಸಾವಿತ್ರಿ ಕಷ್ಟಪಡುವುತ್ತಿರುವುದನ್ನು ನೋಡಿದ ಸಚಿನ್ ಅವರು ಅವರಿಗೆ ಎಟಿಎಂನಿಂದ ಹಣ ತೆಗೆದುಕೊಡುವುದಕ್ಕೆ ನೆರವಾಗಿದ್ದು, ಈ ಕ್ಷಣದಲ್ಲೇ ಇಬ್ಬರಿಗೆ ಪ್ರೀತಿಯಾಗಿದೆ.&lt;/p&gt;&lt;img&gt;&lt;p&gt;ನಂತರ ಇದೇ ಸಮಯದಲ್ಲಿ ಇಬ್ಬರ ನಡುವೆ ದೂರವಾಣಿ ಸಂಖ್ಯೆ ಎಕ್ಸ್&zwnj;ಚೇಂಚ್&zwnj; ಆಗಿದೆ. ಮಾತನಾಡುತ್ತಾ ಆಡುತ್ತಾ ಮತ್ತಷ್ಟು ಹತ್ತಿರವಾಗಿದ್ದು, ಮದುವೆಯಾಗುವುದಕ್ಕೆ ನಿರ್ಧರಿಸಿದ್ದಾರೆ. ಎರಡು ಮನೆಯವರನ್ನು ಈ ಜೋಡಿ ಒಪ್ಪಿಸಿ ಸಾಮೂಹಿಕ ಮದುವೆಯಲ್ಲಿ ವಿವಾಹವಾಗಿದ್ದು ವಿಶೇಷವಾಗಿದೆ. ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಈ ವಿಶೇಷ ಮದುವೆ ನಡೆದಿದೆ. ಬೌದ್ಧ ಸಂಘಟನೆ ಆಯೋಜಿಸಿದ್ದ ಈ ಸಾಮೂಹಿಕ ವಿವಾಹದಲ್ಲಿ ಇನ್ನೂ ಅನೇಕ ಜೋಡಿಗಳು ಹಸೆಮಣೆ ಏರಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/relationship/chikkamagaluru-brahmin-community-man-crossed-the-caste-barrier-marries-a-dalit-girl-r54hh47"/>
        </item>
        <item>
            <title><![CDATA[ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ: ವಿಪಕ್ಷಗಳ ವಿರುದ್ಧ ಕಿಡಿಕಾರಿದ ಸಿ.ಟಿ.ರವಿ]]></title>
            <link>https://kannada.asianetnews.com/karnataka-districts/ct-ravi-slams-congress-women-reservation-bill-gvd/articleshow-tl6eg2x</link>
            <guid isPermaLink="true">https://kannada.asianetnews.com/karnataka-districts/ct-ravi-slams-congress-women-reservation-bill-gvd/articleshow-tl6eg2x</guid>
            <pubDate>Sun, 19 Apr 2026 21:55:46 +0530</pubDate>
            <description><![CDATA[&lt;p&gt;ಮಹಿಳೆಯರಿಗೆ ರಾಜಕೀಯ ನ್ಯಾಯ ನೀಡಬೇಕು. ಮಹಿಳಾ ಮೀಸಲಾತಿ ಮೂಲಕ ಅವರಿಗೆ ರಾಜಕೀಯ ನಿರ್ಣಯ ಕೈಗೊಳ್ಳುವ ಸ್ಥಾನ ಕಲ್ಪಿಸಬೇಕು ಎನ್ನುವುದು ಎನ್&zwnj;ಡಿಎ ಕನಸಾಗಿತ್ತು ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಖಂಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k6n1r2yb9cj970w34ptevx1b,imgname-ct-ravi-1759495588811.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.19):&lt;/strong&gt; ಮಹಿಳೆಯರಿಗೆ ರಾಜಕೀಯ ನ್ಯಾಯ ನೀಡಬೇಕು. ಮಹಿಳಾ ಮೀಸಲಾತಿ ಮೂಲಕ ಅವರಿಗೆ ರಾಜಕೀಯ ನಿರ್ಣಯ ಕೈಗೊಳ್ಳುವ ಸ್ಥಾನ ಕಲ್ಪಿಸಬೇಕು ಎನ್ನುವುದು ಎನ್&zwnj;ಡಿಎ ಕನಸಾಗಿತ್ತು. ಆದರೆ, ಕಾಂಗ್ರೆಸ್, ಡಿಎಂಕೆ, ಆಪ್, ಟಿಎಂಸಿಯಂತಹ ವಿಪಕ್ಷಗಳು ಈ ಕನಸು ಭಂಗಗೊಳಿಸುವ ಕೆಲಸ ಮಾಡಿವೆ ಎಂದು ವಿಧಾನಪರಿಷತ್&zwnj; ಸದಸ್ಯ ಸಿ.ಟಿ.ರವಿ ಖಂಡಿಸಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ ಡಾ. ಬಿ ಆರ್&zwnj;.ಅಂಬೇಡ್ಕರ್ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡುವ ಕನಸು ಕಂಡಿದ್ದರು. ಹಿಂದೂಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸಮಾನ ಅವಕಾಶ ನೀಡುವ ಸಂದರ್ಭದಲ್ಲಿ, ಅಂದಿದ್ದ ಬಹುತೇಕ ಕಾಂಗ್ರೆಸ್ ಸದಸ್ಯರು ಹಿಂದೂಕೋಡ್ ಬಿಲ್ ವಿರುದ್ಧ ಮತ ಚಲಾಯಿಸಿ, ಅಂಬೇಡ್ಕರ್&zwnj; ಆಶಯವಿರೋಧಿಸಿದ್ದರು ಎಂದರು.&lt;/p&gt;&lt;p&gt;ಸ್ವಾತಂತ್ರ&zwj;್ಯ ಬಂದು 79 ವರ್ಷಗಳಾಗಿವೆ ಈಗಲಾದರೂ ಮಹಿಳೆಯರಿಗೆ ನ್ಯಾಯ ಸಿಗಬಹುದು ಎಂದು ಭಾವಿಸಿದ್ದೆವು. ಅವರಿಗೆ ರಾಜಕೀಯ ನ್ಯಾಯ ನೀಡುವ ಪ್ರಧಾನಿ ಮೋದಿ ಪ್ರಯತ್ನಕ್ಕೆ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಅಡ್ಡಿಯಾಗಿ, ತಾವು ಮಹಿಳಾ ವಿರೋಧಿ, ಸಂವಿಧಾನ ವಿರೋಧಿ, ಅಂಬೇಡ್ಕರ್ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಈಗಲೂ ಅಡ್ಡಗಾಲು&lt;/strong&gt;&lt;/h2&gt;&lt;p&gt;ಈ ಮೂಲಕ ಬಸವಣ್ಣನವರ ಸಮ ಸಮಾಜದ ಆಶಯಕ್ಕೆ ವಿಪಕ್ಷಗಳು ಈಗಲೂ ಅಡ್ಡಗಾಲು ಹಾಕಿವೆ. ಮೀಸಲಾತಿ ಇಲ್ಲದ ಕ್ಷೇತ್ರಗಳಲ್ಲಿ ಮಹಿಳೆಯರು ನಿಂತು ಗೆಲ್ಲುವುದು ಅಪರೂಪ. ಮಹಿಳಾ ಶಾಸಕರು ಮತ್ತು ಸಂಸದರ ಸಂಖ್ಯೆ ನಗಣ್ಯ ಎನ್ನುವಷ್ಟಿದೆ. ಮೀಸಲಾತಿಯ ಮೂಲಕ ಅವರಿಗೆ ಶಕ್ತಿ ತುಂಬುವ ಪ್ರಯತ್ನವನ್ನೂ ವಿಪಕ್ಷಗಳು ಹಾಳುಗೆಡವಿವೆ. ಮಹಿಳಾ ಸಂಸದರಾದರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ, ಮಸೂದೆ ಬೆಂಬಲಿಸಬಹುದು ಎನ್ನುವ ವಿಶ್ವಾಸ ಇತ್ತು. ಆದರೆ, ಅವರೂ ಮಸೂದೆಯ ವಿರುದ್ಧ ಮತ ಹಾಕಿರುವುದು ವಿಪರ್ಯಾಸ. ವಿಪಕ್ಷಗಳ ಈ ನಡೆಯನ್ನು ದೇಶ ಕ್ಷಮಿಸುವುದಿಲ್ಲ ಎಂದರು.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/ct-ravi-slams-congress-women-reservation-bill-gvd/articleshow-tl6eg2x"/>
        </item>
        <item>
            <title><![CDATA[ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ  ಬಿಜೆಪಿ ಗೆಲುವು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ]]></title>
            <link>https://kannada.asianetnews.com/karnataka-districts/bs-yediyurappa-bypoll-win-prediction-bjp-davanagere-bagalkot-gvd/articleshow-uyfa6vv</link>
            <guid isPermaLink="true">https://kannada.asianetnews.com/karnataka-districts/bs-yediyurappa-bypoll-win-prediction-bjp-davanagere-bagalkot-gvd/articleshow-uyfa6vv</guid>
            <pubDate>Sat, 18 Apr 2026 23:51:08 +0530</pubDate>
            <description><![CDATA[&lt;p&gt;ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಅಂತರದಿಂದ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h9s9wyc1sprab7qnfr1rddhk,imgname-bs.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.18): &lt;/strong&gt;ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಅಂತರದಿಂದ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಮಾಜಿ ಸಚಿವ ಸಿ.ಟಿ.ರವಿ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ. ಅದನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.&lt;/p&gt;&lt;p&gt;ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಹಿಳಾ ಮೀಸಲಾತಿಯನ್ನು ವಿರೋಧಿಸುವುದು ಸಮಾನತೆ ವಿರೋಧಿಗಳು ಎಂದರು. ಮಹಿಳಾ ಮೀಸಲಾತಿ ಬಗ್ಗೆ ಬಹಳ ವರ್ಷಗಳಿಂದ ಮಾತನಾಡಿಕೊಂಡು ಬರುತ್ತಿದ್ದೇವೆ. ಇನ್ನು ಚರ್ಚೆ ಆಗಬೇಕು ಅಂದರೆ ಅದು ಸ್ಪಷ್ಟವಾಗಿ ವಿಳಂಬ ಮಾಡುವ ನೀತಿಯಾಗಿದೆ. ಮಹಿಳಾ ಮೀಸಲಾತಿ ಜಾರಿ ರಾಜಕೀಯ ಲಾಭಕ್ಕಾಗಿ ಅನ್ನೋದು ತಪ್ಪು. ಒಳ್ಳೆಯ ನೀತಿ ಯಾವಾಗ ಬಂದರೂ ಒಳ್ಳೆಯದಾಗಿದೆ.&lt;/p&gt;&lt;p&gt;ಬಸವಣ್ಣನವರು ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಅವಕಾಶ ಬಗ್ಗೆ ಹೇಳಿದ್ದಾರೆ. ಅವರ ಕಾಲದಲ್ಲಿ ಹೆಣ್ಣು-ಗಂಡು ಭೇದವಿಲ್ಲದೆ ಸಮಾನ ಹಕ್ಕಿಗಾಗಿ ಹೋರಾಡಿದ್ದರು. ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆ ತತ್ವಕ್ಕೆ ವಿರೋಧವಾಗಿದೆ. ವಿರೋಧ ಪಕ್ಷದ ಈ ನೀತಿ ಖಂಡಿಸುತ್ತೇನೆ ಎಂದು ಹೇಳಿದರು.&lt;/p&gt;&lt;p&gt;ಬಸವಣ್ಣನವರ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇತ್ತು. ಅಕ್ಕಮಹಾದೇವಿಯಂತಹವರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅವಕಾಶ ನೀಡಲಾಗಿತ್ತು. ಅದೇ ತತ್ವ ಈಗ ಮುಂದುವರಿಯಬೇಕೆಂದರೆ, ಮಹಿಳೆಯರಿಗೆ ರಾಜಕೀಯ ಪ್ರವೇಶ ಅವಕಾಶ ಕೊಡೋದು ಅನಿವಾರ್ಯ ಎಂದು ಪ್ರತಿಪಾದಿಸಿದರು.&lt;/p&gt;&lt;h2&gt;&lt;strong&gt;ವಿದ್ಯುತ್ ದರ ಏರಿಕೆಗೆ ಬಿಎಸ್&zwnj;ವೈ ಆಕ್ರೋಶ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ವಿದ್ಯುತ್&zwnj; ದರ ಏರಿಕೆ ಮಾಡಿರುವುದು ಸರಿಯಲ್ಲ. ಸರಿಯಾಗಿ ಆಡಳಿತ ಮತ್ತು ಹಣಕಾಸಿ ವ್ಯವಹಾರ ಸರಿಯಾಗಿ ನಿಬಾಹಿಸುವುದಕ್ಕೆ ಸಾಧ್ಯವಾಗದೇ ದರ ಏರಿಕೆ ಮಾಡಲಾಗುತ್ತಿದೆ. ಜನ ಸಾಮಾನ್ಯರು ನೆಮ್ಮದಿ ಯಿಂದ ಗೌರವದಿಂದ ಬದುಕುವುದಕ್ಕೆ ಅವಕಾಶ ಮಾಡಿಕೊಡಬೇಕು. ತಕ್ಷಣ ವಿದ್ಯುತ್&zwnj; ದರ ಏರಿಕೆ ಹಿಂಪಡೆಯಬೇಕು ಎಂದು ಬಿಎಸ್&zwnj; ಯಡಿಯೂರಪ್ಪ ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>chikkamagalur</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bs-yediyurappa-bypoll-win-prediction-bjp-davanagere-bagalkot-gvd/articleshow-uyfa6vv"/>
        </item>
        <item>
            <title><![CDATA[ಚಿಕ್ಕಮಗಳೂರು: ಕಾಡಾನೆಗಳ ಬಳಿಕ ಕಾಡುಕೋಣಗಳ ಹಾವಳಿ: ಟೀ ಎಸ್ಟೇಟ್‌ನಲ್ಲಿ ದಾಂಧಲೆ: 1 ಕಾಟಿ ಸಾವು]]></title>
            <link>https://kannada.asianetnews.com/gallery/state/after-wild-elephants-wild-ride-by-wild-bison-in-chikmagalur-ygmzt1s</link>
            <guid isPermaLink="true">https://kannada.asianetnews.com/gallery/state/after-wild-elephants-wild-ride-by-wild-bison-in-chikmagalur-ygmzt1s</guid>
            <pubDate>Wed, 22 Apr 2026 13:12:53 +0530</pubDate>
            <description><![CDATA[ಚಿಕ್ಕಮಗಳೂರಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಟೀ ಎಸ್ಟೇಟ್&zwnj;ಗಳಲ್ಲಿ ದಾಂಧಲೆ ನಡೆಸುತ್ತಿವೆ. ಇತ್ತೀಚೆಗೆ ಎರಡು ಕಾಡುಕೋಣಗಳ ನಡುವಿನ ಕಾದಾಟದಲ್ಲಿ ಒಂದು ಸಾವನ್ನಪ್ಪಿದ್ದು, ಮೂರು ದಿನಗಳ ಹಿಂದೆ ಕಾಡುಕೋಣ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpt1vj7gjft6ngy875zy2gqz,imgname-chikkamagaluru-wild-baison--3--1776843344112.jpeg" type="image/jpeg" height="390" width="690"/>
            <content:encoded><![CDATA[ಚಿಕ್ಕಮಗಳೂರಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಟೀ ಎಸ್ಟೇಟ್&zwnj;ಗಳಲ್ಲಿ ದಾಂಧಲೆ ನಡೆಸುತ್ತಿವೆ. ಇತ್ತೀಚೆಗೆ ಎರಡು ಕಾಡುಕೋಣಗಳ ನಡುವಿನ ಕಾದಾಟದಲ್ಲಿ ಒಂದು ಸಾವನ್ನಪ್ಪಿದ್ದು, ಮೂರು ದಿನಗಳ ಹಿಂದೆ ಕಾಡುಕೋಣ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.&lt;img&gt;&lt;p&gt;ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಬಳಿಕ ಕಾಡು ಕೋಣಗಳ ಹಾವಳಿ ಹೆಚ್ಚಾಗಿದ್ದು ಟೀ ಎಸ್ಟೇಟ್&zwnj;ನಲ್ಲಿ ದಾಂಧಲೆ ನಡೆಸುತ್ತಿರುವ ಈ ಕಾಡುಕೋಣಗಳು ಟೀ ಸೋಪ್ಪನ್ನು ತುಳಿದು ನಾಶ ಮಾಡುತ್ತಿವೆ.&lt;/p&gt;&lt;img&gt;&lt;p&gt;ಕೊಪ್ಪ ತಾಲೂಕಿನ&zwnj; ಎಲೆಮಡಲು ಸಮೀಪದ ಟೀ ಎಸ್ಟೇಟಿನಲ್ಲಿ ಕಾಡು ಕೋಣಗಳ ಗುಂಪು ಬೀಡು ಬಿಟ್ಟಿದ್ದು, 2 ಕಾಡುಕೋಣಗಳ ನಡುವಿನ ಜಗಳದಲ್ಲಿ ಒಂದು ಕಾಡುಕೋಣ ಸಾವನ್ನಪ್ಪಿದೆ.&lt;/p&gt;&lt;img&gt;&lt;p&gt;ಟೀ ಎಸ್ಟೇಟ್&zwnj;ನಲ್ಲಿ ಕಾಡು ಕೋಣಗಳು ಬೀಡು ಬಿಟ್ಟಿದ್ದು, ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಕ್ರಮ ಕೈಗೊಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಲ್ಲಿ ನಿರಂತರವಾಗಿ ಕಾಡುಕೋಣಗಳ ಹಾವಳಿ ತೀವ್ರವಾಗಿದೆ.&lt;/p&gt;&lt;img&gt;&lt;p&gt;ಇಲ್ಲಿ 2 ಕಾಟಿಗಳ ನಡುವಿನ ಜಗಳದಲ್ಲಿ ಒಂದು ಕಾಟಿ ಸಾವನ್ನಪ್ಪಿದೆ. ಎರಡು ಕಾಡುಕೋಣಗಳ ನಡುವಿನ ಕಾದಾಟದ ವೇಳೆ 50 ಅಡಿ ಎತ್ತರದಿಂದ ಬಿದ್ದ ಒಂದು ಕಾಡುಕೋಣ ಸಾವನ್ನಪ್ಪಿದೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿಕಿತ್ಸೆ ನೀಡಿದರೂ ಕಾಡುಕೋಣ ಬದುಕುಳಿದಿಲ್ಲ.&lt;/p&gt;&lt;img&gt;&lt;p&gt;ಮಲೆನಾಡಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, 3 ದಿನಗಳ ಹಿಂದಷ್ಟೇ ಕಾಡುಕೋಣಗಳ ದಾಳಿಗೆ ಯುವಕ ಸಾವನ್ನಪ್ಪಿದ್ದ. ಇಲ್ಲಿನ ಕಾಫಿತೋಟ-ಟೀ ಎಸ್ಟೇಟಿನಲ್ಲಿ ಬೀಡು ಬಿಟ್ಟಿರೋ ಕಾಡುಕೋಣಗಳ ಹಿಂಡು ಬೀಡು ಬಿಟ್ಟಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಕೊಡಗು ಹೋಂ ಸ್ಟೇಯಲ್ಲಿ ಕರಾಳ ಘಟನೆ: ಸಿಬ್ಬಂದಿಯಿಂದಲೇ ವಿದೇಶಿ ಮಹಿಳೆ ಮೇಲೆ ರೇ**ಪ್&lt;/p&gt;]]></content:encoded>
            <category>chikkamagalur</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/after-wild-elephants-wild-ride-by-wild-bison-in-chikmagalur-ygmzt1s"/>
        </item>
    </channel>
</rss>
