<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 24 Jun 2026 13:13:02 +0530</lastBuildDate>
        <atom:link href="https://kannada.asianetnews.com/rss/chitradurga" rel="self" type="application/rss+xml"/>
        <item>
            <title><![CDATA[ಸುಹಾಸ್ ಸುಧಾಕರ್‌ ರಾಜಕೀಯ ಅಖಾಡ ಪ್ರವೇಶಿಸುವುದು ಖಚಿತ, ಕೈ ಶಾಸಕರ ಬಾಯಿಂದಲೇ ಸುಧಾಕರ್ ಕುಟುಂಬಕ್ಕೆ ಟಿಕೇಟ್ ಸಂದೇಶ]]></title>
            <link>https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4</link>
            <guid isPermaLink="true">https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4</guid>
            <pubDate>Fri, 22 May 2026 15:04:07 +0530</pubDate>
            <description><![CDATA[&lt;p&gt;ವರದಿ: ಜಡೇಕುಂಟೆ ಮಂಜುನಾಥ್&lt;/p&gt;&lt;p&gt;ದಿವಂಗತ ಸಚಿವ ಡಿ. ಸುಧಾಕರ್ ಅವರ ನಿಧನದ ನಂತರ ಪುತ್ರ ಸುಹಾಸ್ ರಾಜಕೀಯ ಅಖಾಡಕ್ಕೆ ಧುಮುಕುವುದು ನಿಶ್ಚಿತವಾಗಿದೆ. ಅಪ್ಪನ ಉತ್ತರಾಧಿಕಾರಿಯಾಗಿ ಹಿರಿಯೂರಿನಲ್ಲಿ ಬೆಂಬಲಿಗರನ್ನು ಭೇಟಿಯಾಗಿರುವ ಸುಹಾಸ್ ಅವರ ರಾಜಕೀಯ ಭವಿಷ್ಯವು ಇದೀಗ ಮತದಾರರು ಮತ್ತು ಪಕ್ಷದ ನಾಯಕರ ಕೈಯಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks7g1h7ggea0zac9d36yxdt7,imgname-suhas-sudhakar--2--1779441911024.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಜಡೇಕುಂಟೆ ಮಂಜುನಾಥ್&lt;/p&gt;&lt;p&gt;ದಿವಂಗತ ಸಚಿವ ಡಿ. ಸುಧಾಕರ್ ಅವರ ನಿಧನದ ನಂತರ ಪುತ್ರ ಸುಹಾಸ್ ರಾಜಕೀಯ ಅಖಾಡಕ್ಕೆ ಧುಮುಕುವುದು ನಿಶ್ಚಿತವಾಗಿದೆ. ಅಪ್ಪನ ಉತ್ತರಾಧಿಕಾರಿಯಾಗಿ ಹಿರಿಯೂರಿನಲ್ಲಿ ಬೆಂಬಲಿಗರನ್ನು ಭೇಟಿಯಾಗಿರುವ ಸುಹಾಸ್ ಅವರ ರಾಜಕೀಯ ಭವಿಷ್ಯವು ಇದೀಗ ಮತದಾರರು ಮತ್ತು ಪಕ್ಷದ ನಾಯಕರ ಕೈಯಲ್ಲಿದೆ.&lt;/p&gt;&lt;img&gt;&lt;p&gt;ಚಳ್ಳಕೆರೆ: ಚಳ್ಳಕೆರೆ ಗೊಮ್ಮಟ ನಿಲಯದಿಂದ ಬೆಂಗಳೂರಿನ ವಿಧಾನಸೌಧದವರೆಗೂ ಸುಮಾರು ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ಮಂತ್ರಿಯಾಗಿ ಹೋಗಿ ಬಂದಿದ್ದ ಡಿ.ಸುಧಾಕರ್ ಅವರು ಅನಾರೋಗ್ಯದಿಂದ ಈಚೆಗೆ ನಿಧನರಾದ ಮೇಲೆ ಅವರ ಪುತ್ರ ಸುಹಾಸ್ ರಾಜಕೀಯ ಅಖಾಡ ಪ್ರವೇಶಿಸುವುದು ನಿಕ್ಕಿಯಾಗಿದೆ.&lt;/p&gt;&lt;img&gt;&lt;p&gt;ಇದಕ್ಕೆ ಪುಷ್ಟೀಕರಿಸುವ ಬೆಳೆವಣಿಗೆಗಳು ಈಗಾಗಲೇ ಹಿರಿಯೂರು ಚಳ್ಳಕೆರೆಯಲ್ಲಿ ಜರುಗಿವೆ. ಅಪ್ಪನ ಉತ್ತರಾಧಿಕಾರಿಯಾಗಲು ಇದೀಗ ಸುಹಾಸ್ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ಹಿರಿಯೂರಿನ ಕಾಂಗ್ರೆಸ್ ಕಚೇರಿಗೆ ತೆರಳಿ ಅಪ್ಪನ ಅನುಯಾಯಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿ ಬಂದಿರುವ ಸುಧಾಕರ್ ಪುತ್ರ ಸುಹಾಸ್ ಅವರಲ್ಲಿ ಸುಧಾಕರ್ ಪ್ರತಿಬಿಂಬವನ್ನು ಕಾಣುತ್ತಿರುವ ಹಿರಿಯೂರಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಜಿಲ್ಲೆಯ ಅಭಿಮಾನಿಗಳಿಗೆ ಕೊಂಚ ನಿಟ್ಟುಸಿರು ಬಿಟ್ಟಂತಾಗಿರುವುದು ನಿಜ. ಏಕೆಂದರೆ ಮೂರು ಅವಧಿಗೆ ಸುಧಾಕರ್ ಅವರನ್ನು ಶಾಸನ ಸಭೆಗೆ ಆರಿಸಿ ಕಳುಹಿಸಲು ಹಿರಿಯೂರಿನ ಜನತೆಯ ಆರ್ಶೀವಾದವೇ ಕಾರಣ. ಜನನಾಯಕನಾಗಿ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಎಲ್ಲರ ಪ್ರೀತಿಯ ಸುಧಣ್ಣ ದೀಢೀರನೆ ಎದ್ದು ಹೋಗಿದ್ದು ಮಾತ್ರ ಯಾರಿಗೂ ಜೀರ್ಣಿಸಿಕೊಳ್ಳಲು ಆಗಲಿಲ್ಲ.&lt;/p&gt;&lt;p&gt;ಇವರ ನಂತರ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಹೈಕಮಾಂಡ್ ಅವಕಾಶವೇ ಕೊಡಲಿಲ್ಲ. ಜಿಲ್ಲೆಯ ಕಾಂಗ್ರೆಸ್ ಶಾಸಕರ ಬಾಯಿಂದಲೇ ಸುಧಾಕರ್ ಕುಟುಂಬಕ್ಕೆ ಟಿಕೇಟ್ ಎಂಬ ಸಂದೇಶವನ್ನು ಹೇಳಿಸುವ ಮೂಲಕ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟೇ ಬಿಟ್ಟಿತು. ಆಗ ಸುಧಾಕರ್ ಪುತ್ರ ಸುಹಾಸ್ ಹಿರಿಯೂರಿನ ಅಖಾಡಕ್ಕೆ ಇಳಿದರು.&lt;/p&gt;&lt;img&gt;&lt;p&gt;ಇತ್ತ ಚಳ್ಳಕೆರೆಯಲ್ಲಿ ಪ್ರಥಮವಾಗಿ ನುಡಿನಮನ ಕಾರ್ಯಕ್ರಮ ಮಾಡಿದ ಶಾಸಕ ರಘುಮೂರ್ತಿ ಅವರು ಸುಧಾಕರ್ ಕುಟುಂಬದ ಜೊತೆ ಇರುತ್ತೇವೆ ಎಂಬ ಸಂದೇಶವನ್ನು ರವಾನಿಸಿಬಿಟ್ಟರು. ಚಳ್ಳಕೆರೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಸುಧಾಕರ್ ಸಾಧನೆಗಳನ್ನು ಹಾಗೂ ಅವರ ಸಮಾಜ ಸೇವೆಯನ್ನು ಸೇರಿದಂತೆ ಇನ್ನಿತರೆ ಗುಣಾವಗುಣಗಳನ್ನು ಅವಲೋಕನ ಮಾಡಿದ ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವ ಎಚ್.ಆಂಜನೇಯ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರೂ ಕೂಡ ಇದೇ ಅರ್ಥ ಬರುವ ಮಾತುಗಳನ್ನಾಡಿದ್ದರು.&lt;/p&gt;&lt;p&gt;ಕೆ.ಸಿ.ವೀರೇಂದ್ರ ಪಪ್ಪಿ ಹಿರಿಯೂರಿಗೆ ತೆರಳಿ ಸುಹಾಸ್ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ ಸಮಾಲೋಚನ ಸಭೆ ನಡೆಸಿ ಬಂದಿದ್ದಾರೆ. ಹಿರಿಯೂರು ತಾಲೂಕಿನ ಮುಖಂಡರು ಸುಹಾಸ್ ಆಗಮನವನ್ನು ಎದುರು ನೋಡುತ್ತಿದ್ದಾರೆ. ಹೇಗೋ ದೊಡ್ಡವರು ಹೋದ್ರು. ಅವರ ಪುತ್ರ ಬಂದರು ಎಂಬ ಸಮಾಧಾನಕ್ಕೆ ಮೊರೆಹೋಗಿದ್ದಾರೆ.&lt;/p&gt;&lt;img&gt;&lt;p&gt;ಅಪ್ಪನಷ್ಟು ಅನುಭವವಿಲ್ಲದಿದ್ದರೂ ಅಪ್ಪನ ಒಳಗಿದ್ದ ಮಾನವೀಯ ಸೆಲೆಗಳಿವೆ ಎಂಬುದನ್ನು ಸುಹಾಸ್ ಮೊದಲ ಯತ್ನದಲ್ಲೇ ಅನಾವರಣಗೊಳಿಸಿದ್ದಾರೆ. ಇಂತಹ ಯುವಕ ರಾಜಕೀಯ ಅಖಾಡದಲ್ಲಿ ಇಳಿಯುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಮತದಾರ ಸೇರಿದಂತೆ ಕಾಂಗ್ರೆಸ್ ಧುರೀಣರು ಕೈ ಹಿಡಿಯುತ್ತಾರಾ ಎಂಬ ಪ್ರಶ್ನೆಗಳು ಎದುರಾಗಿವೆ. ಜಿಲ್ಲೆಯಲ್ಲಿ ಬಹುತೇಕ ಜನರಿಗೆ ಸಹಾಯದ ಹಸ್ತ ಚಾಚಿರುವ ಸುಧಾಕರ್ ಅವರು ರಾಜಕೀಯವಾಗಿಯೂ ಅನೇಕರನ್ನು ಬೆಳೆಸಿದ್ದಾರೆ. ಇದೀಗ ಅವರ ಮಗನನ್ನು ಮತದಾರ, ಕಾಂಗ್ರೆಸ್ ಮುಖಂಡರು ಹೈಕಮಾಂಡ್ ಕೈಹಿಡಿಯಬೇಕಿದೆ. ಸುಧಾಕರ್ ಬದುಕಿದ್ದಾಗ ಯಾವುದೇ ಚುನಾವಣೆಯಾಗಲಿ ಸುಧಾಕರ್ ಹೇಳಿದವರೇ ಚುನಾಯಿತರಾಗುತ್ತಿದ್ದ ಕಾಲವೊಂದಿತ್ತು. ಆದರೆ, ಇದೀಗ ಅವರ ಕುಟುಂಬದ ಕುಡಿಯನ್ನು ಹಿರಿಯೂರಿನ ಜನತೆ ಪೊರೆಯಬೇಕಿದೆ.&lt;/p&gt;&lt;img&gt;&lt;p&gt;ಚಳ್ಳಕೆರೆಯವರೇ ಆದ ಸುಧಾಕರ್ ಅವರ ಪುತ್ರ ಸುಹಾಸ್ ಅವರನ್ನು ಚಳ್ಳಕೆರೆ ಕ್ಷೇತ್ರದ ಶಾಸಕ ರಘುಮೂರ್ತಿ, ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕೈ ಹಿಡಿಯಲೇ ಬೇಕಿದೆ. ಏಕೆಂದರೆ, ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಸುಧಾಕರ್ ಇವರೆಲ್ಲರಿಗೂ ಬೆನ್ನೆಲುಬಾಗಿದ್ದವರು. ಅಂತಹ ರಾಜಕೀಯ ಋಣಸಂದಾಯಕ್ಕಾಗಿ ಸುಧಾಕರ್ ಕುಟುಂಬದ ಕುಡಿಯನ್ನು ರಾಜಕೀಯ ಪಡಸಾಲೆಗೆ ಕರೆತರುತ್ತಾರಾ? ಇಂತಹ ಚರ್ಚೆಗಳು ಇದೀಗ ಜಿಲ್ಲೆಯಲ್ಲಿ ಗರಿಗೆದರಿವೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4"/>
        </item>
        <item>
            <title><![CDATA[Davanagere: RSI ಮೋಸ ಆರೋಪಕ್ಕೆ ಟ್ಚಿಸ್ಟ್, ಖಾಕಿ ಜೊತೆಯೇ ಯುವತಿಯ ರಂಗಿನಾಟ! ಪೊಲೀಸರೇ ಇವಳ ಟಾರ್ಗೆಟ್?]]></title>
            <link>https://kannada.asianetnews.com/karnataka-districts/twist-in-chitradurga-rsi-marriage-fraud-case-woman-accused-of-honey-trapping-police-personnel-gdp/articleshow-0zllli9</link>
            <guid isPermaLink="true">https://kannada.asianetnews.com/karnataka-districts/twist-in-chitradurga-rsi-marriage-fraud-case-woman-accused-of-honey-trapping-police-personnel-gdp/articleshow-0zllli9</guid>
            <pubDate>Mon, 18 May 2026 13:26:52 +0530</pubDate>
            <description><![CDATA[ಚಿತ್ರದುರ್ಗದ ಡಿಎಆರ್&zwnj; RSI ವರುಣ್&zwnj;ಕುಮಾರ್ ವಿರುದ್ಧ ಯುವತಿಯೊಬ್ಬಳು ಮದುವೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದಳು. ಇದೀಗ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಯುವತಿಯೇ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆ ಎಂದು RSI ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krx14byn16j59mdwcjn6zx9g,imgname-chitradurga-rsi-varun-kumar-case-1779090730965.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ : &lt;/strong&gt;ಮದುವೆಯ ಆಮಿಷವೊಡ್ಡಿ ಚಿತ್ರದುರ್ಗ ಡಿಎಆರ್&zwnj; (DAR) ವಿಭಾಗದ RSI ವಿರುದ್ಧ ಯುವತಿ ನೀಡಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ RSI ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರೂ, ಇದೀಗ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಹೊರಬಂದಿದ್ದು, ಯುವತಿಯ ಮೇಲೆಯೇ ಮೋಸದ ಆರೋಪಗಳು ಕೇಳಿಬರುತ್ತಿವೆ.&lt;/p&gt;&lt;p&gt;ಚಿತ್ರದುರ್ಗದಲ್ಲಿ ಡಿಎಆರ್&zwnj; RSI ಆಗಿ ಸೇವೆ ಸಲ್ಲಿಸುತ್ತಿರುವ ದಾವಣಗೆರೆ ಮೂಲದ ವರುಣ್&zwnj;ಕುಮಾರ್ ವಿರುದ್ಧ, ಮದುವೆಯ ಭರವಸೆ ನೀಡಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ದೂರು ಹೊರಬಿದ್ದ ತಕ್ಷಣವೇ ಪ್ರಕರಣವು ಚರ್ಚೆಗೆ ಗ್ರಾಸವಾಗಿತ್ತು.&lt;/p&gt;&lt;h2&gt;ಮಹತ್ವದ ಫೋಟೋಗಳನ್ನು ಬಿಡುಗಡೆ ಮಾಡಿದ ವರುಣ್&zwnj; &amp;nbsp;ಕುಟುಂಬಸ್ಥರು&lt;/h2&gt;&lt;p&gt;ಇದೀಗ RSI ವರುಣ್&zwnj;ಕುಮಾರ್ ಕುಟುಂಬಸ್ಥರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಮಹತ್ವದ ಫೋಟೋಗಳನ್ನು ಬಿಡುಗಡೆ ಮಾಡಿ, ಯುವತಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಯುವತಿ ಪೊಲೀಸ್ ಸಿಬ್ಬಂದಿಯನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮೂಲಕ ಹಣ ವಸೂಲಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾಳೆ ಎಂದು &amp;nbsp;ಗಂಭೀರ ಆರೋಪ ಮಾಡಿದ್ದಾರೆ.&lt;/p&gt;&lt;p&gt;ಕುಟುಂಬಸ್ಥರ ಪ್ರಕಾರ, ಯುವತಿ ಮೊದಲು ಇನ್&zwnj;ಸ್ಟಾಗ್ರಾಂ ಮೂಲಕ ವರುಣ್&zwnj;ಕುಮಾರ್ ಪರಿಚಯ ಮಾಡಿಕೊಂಡು ಪ್ರೀತಿಯ ನಾಟಕವಾಡಿದ್ದಳು. ನಂತರ ಆಕೆಯ ವರ್ತನೆ ಬಗ್ಗೆ ಅನುಮಾನಗೊಂಡ ವರುಣ್ ದೂರವಾಗಲು ಯತ್ನಿಸಿದ್ದಾನೆ. ಇದಾದ ಬಳಿಕ ಯುವತಿ ಮದುವೆಯಾಗುವಂತೆ ಒತ್ತಾಯಿಸಿದ್ದು, ಇಲ್ಲವಾದರೆ 10 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ ಎಂದು ಅವರು ಹೇಳಿದ್ದಾರೆ.&lt;/p&gt;&lt;h2&gt;ಮತ್ತೋರ್ವ ಪೊಲೀಸ್ ಪೇದೆಗೆ ಮೋಸ ಮಾಡಿದ್ದಾಳೆ ಎಂಬ ಆರೋಪ&lt;/h2&gt;&lt;p&gt;ಹಣ ನೀಡಲು ಒಪ್ಪದಿದ್ದ ಹಿನ್ನೆಲೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ ಎಂಬುದು ಕುಟುಂಬಸ್ಥರ ವಾದ. ಅಲ್ಲದೆ, ಇದೇ ರೀತಿಯಲ್ಲಿ ಈ ಯುವತಿ ಈ ಹಿಂದೆಯೂ ದಾವಣಗೆರೆಯಲ್ಲಿ ಒಬ್ಬ ಯುವಕನಿಗೆ ಹಾಗೂ ಮತ್ತೋರ್ವ ಪೊಲೀಸ್ ಪೇದೆಗೆ ಮೋಸ ಮಾಡಿದ್ದಾಳೆ ಎಂಬ ಆರೋಪವನ್ನೂ ಅವರು ಮುಂದಿಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಎಂದು ಮತ್ತೋರ್ವ ಪೊಲೀಸ್ ಸಿಬ್ಬಂದಿಯೊಂದಿಗೆ ಇರುವ ಫೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದಾಳೆ. ಅನೇಕ ಯುವಕರು ಆಕೆಯ ಬಲೆಗೆ ಬಿದ್ದು ಹಣ ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.&lt;/p&gt;&lt;p&gt;ಇದರ ನಡುವೆ, ದೂರು ದಾಖಲಾದ ದಿನದಿಂದ RSI ವರುಣ್&zwnj;ಕುಮಾರ್ ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ ಎಂದು ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ವರುಣ್&zwnj;ಗೆ ಏನೇ ಅನಾಹುತವಾದರೂ ಅದಕ್ಕೆ ಆ ಯುವತಿಯೇ ಹೊಣೆ ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಮಗ್ರ ತನಿಖೆ ಅಗತ್ಯವಿದೆ ಎಂದು ಆಗ್ರಹಿಸಿರುವ ಕುಟುಂಬಸ್ಥರು, ತಮ್ಮ ಮಗನಿಗೆ ನ್ಯಾಯ ಒದಗಿಸಬೇಕೆಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.&lt;/p&gt;&lt;p&gt;ಒಟ್ಟಾರೆ, ಮದುವೆ ಆಮಿಷ, ಲೈಂಗಿಕ ದೌರ್ಜನ್ಯ ಆರೋಪ ಮತ್ತು ಹನಿಟ್ರ್ಯಾಪ್ ಆರೋಪಗಳ ನಡುವೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ಫಲಿತಾಂಶವೇ ಸತ್ಯವನ್ನು ಹೊರತರುವ ನಿರೀಕ್ಷೆಯಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/twist-in-chitradurga-rsi-marriage-fraud-case-woman-accused-of-honey-trapping-police-personnel-gdp/articleshow-0zllli9"/>
        </item>
        <item>
            <title><![CDATA[ಚಿತ್ರದುರ್ಗ: ಕತ್ತಿಗೆ ಗ್ರ್ಯಾನೈಟ್ ಕಲ್ಲು ಬಿದ್ದು CUDA ಮಾಜಿ ಅಧ್ಯಕ್ಷರ ಪುತ್ರ ಸಾವು, ಕುಟುಂಬದಿಂದ ಮಗನ ಕಣ್ಣುದಾನ]]></title>
            <link>https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</link>
            <guid isPermaLink="true">https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</guid>
            <pubDate>Thu, 18 Jun 2026 19:16:35 +0530</pubDate>
            <description><![CDATA[ಚಿತ್ರದುರ್ಗದ ಮಾರ್ಬಲ್ಸ್ ಗೋದಾಮಿನಲ್ಲಿ ಗ್ರ್ಯಾನೈಟ್ ಬಿಲ್ಲೆ ಕುತ್ತಿಗೆ ಮೇಲೆ ಬಿದ್ದು ರಾಣಾ ಪ್ರತಾಪ್ ಸಿಂಹ ಎಂಬ ಯುವಕ ದುರಂತ ಸಾವಿಗೀಡಾಗಿದ್ದಾನೆ. ಈ ದುಃಖದ ನಡುವೆಯೂ, ಮೃತನ ಕುಟುಂಬವು ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvdevgwcwgcyyz8echjjk5ne,imgname-chitradurga-warehouse-accident-1781789475724.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಕೋಟೆನಾಡು ಚಿತ್ರದುರ್ಗ ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿರುವ ಮಾರ್ಬಲ್ಸ್ ಗೋದಾಮಿನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಗ್ರ್ಯಾನೈಟ್&zwnj;ಗಳನ್ನು ಗೋದಾಮಿಗೆ ಶಿಫ್ಟ್ ಮಾಡುವ ವೇಳೆ ಭಾರಿ ಗಾತ್ರದ ಗ್ರ್ಯಾನೈಟ್ ಬಿಲ್ಲೆಯೊಂದು ಆಕಸ್ಮಿಕವಾಗಿ ಕುತ್ತಿಗೆಯ ಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.&lt;/p&gt;&lt;p&gt;ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರ ಪುತ್ರ ರಾಣಾ ಪ್ರತಾಪ್ ಸಿಂಹ (30) ಮೃತಪಟ್ಟ ದುರ್ದೈವಿ ಯುವಕ. ಈ ಹಠಾತ್ ದುರಂತವು ಮೃತರ ಕುಟುಂಬಸ್ಥರು ಹಾಗೂ ಸ್ನೇಹಿತರ ವಲಯದಲ್ಲಿ ಭಾರೀ ಆಘಾತ ಮೂಡಿಸಿದೆ.&lt;/p&gt;&lt;h2&gt;ದುರಂತ ಸಂಭವಿಸಿದ್ದು ಹೇಗೆ?&lt;/h2&gt;&lt;p&gt;ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ 'ದೇವಿ ಮಾರ್ಬಲ್ಸ್ ಮತ್ತು ಗ್ರ್ಯಾನೈಟ್ಸ್' ಗೋದಾಮಿನಲ್ಲಿ ಈ ದುರ್ಘಟನೆ ನಡೆದಿದೆ. ಗೋದಾಮಿಗೆ ಹೊಸದಾಗಿ ಬಂದಿದ್ದ ಗ್ರ್ಯಾನೈಟ್ ಲೋಡ್ ಅನ್ನು ಕಾರ್ಮಿಕರು ಅನ್ಲೋಡ್ ಮಾಡಿ ಒಳಗೆ ಜೋಡಿಸಿ ಇಡುತ್ತಿದ್ದರು. ಈ ವೇಳೆ ರಾಣಾ ಪ್ರತಾಪ್ ಸಿಂಹ ಅವರು ಗೋದಾಮಿನ ಒಳಗಿನ ಗೋಡೆಯೊಂದರ ಪಕ್ಕದಲ್ಲಿ ನಿಂತು ಗಮನಿಸುತ್ತಿದ್ದರು ಎನ್ನಲಾಗಿದೆ. ದುರದೃಷ್ಟವಶಾತ್, ಗ್ರ್ಯಾನೈಟ್ ಬಿಲ್ಲೆಗಳನ್ನು ಸ್ಥಳಾಂತರಿಸುವಾಗ ನಿಯಂತ್ರಣ ತಪ್ಪಿ ಭಾರಿ ತೂಕದ ಗ್ರ್ಯಾನೈಟ್ ಕಲ್ಲು ನೇರವಾಗಿ ಗೋಡೆ ಬಳಿ ನಿಂತಿದ್ದ ಪ್ರತಾಪ್ ಅವರ ಕುತ್ತಿಗೆಯ ಭಾಗಕ್ಕೆ ಬಿದ್ದಿದೆ. ಕಲ್ಲಿನ ಭೀಕರ ಹೊಡೆತ ಹಾಗೂ ತೂಕಕ್ಕೆ ಕುತ್ತಿಗೆಯ ಭಾಗ ತೀವ್ರವಾಗಿ ಜಜ್ಜಲ್ಪಟ್ಟು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ&lt;/h2&gt;&lt;p&gt;ಆದರ್ಶ ಯುವಕನಾಗಿದ್ದ ಪ್ರತಾಪ್ ಅವರ ಹಠಾತ್ ಸಾವು ತಂದೆ ತಿಪ್ಪೇಸ್ವಾಮಿ ಹಾಗೂ ಇಡೀ ಕುಟುಂಬವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ. ಮಗನನ್ನು ಕಳೆದುಕೊಂಡು ಕಣ್ಣೀರುಡುತ್ತಿದ್ದ ಸಂದರ್ಭದಲ್ಲೂ ಕುಟುಂಬಸ್ಥರು ಅತ್ಯಂತ ಶ್ಲಾಘನೀಯ ಹಾಗೂ ಸಾರ್ಥಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ನಮ್ಮ ಮಗ ಇನ್ನಿಲ್ಲವಾದರೂ ಅವನ ಕಣ್ಣುಗಳು ಮತ್ತೊಬ್ಬರಿಗೆ ಬೆಳಕಾಗಲಿ ಎಂಬ ಉದಾತ್ತ ಚಿಂತನೆಯಿಂದ ಮೃತ ರಾಣಾ ಪ್ರತಾಪ್ ಸಿಂಹ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.&lt;/p&gt;&lt;h2&gt;ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆ ಸಂಭವಿಸುತ್ತಿದ್ದಂತೆ ವಿಷಯ ತಿಳಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳ ಲೋಪದೋಷಗಳಿದ್ದವೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq"/>
        </item>
        <item>
            <title><![CDATA[ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವ: ಕಾರ್ಯಕ್ರಮಕ್ಕೆ ಬರುವ ವಾಹನ ಪಾರ್ಕಿಂಗ್ ಸ್ಥಳಗಳಿಗೆ ನಾಡಿನ ನದಿಗಳ ಹೆಸರು!]]></title>
            <link>https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47</link>
            <guid isPermaLink="true">https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47</guid>
            <pubDate>Sat, 09 May 2026 11:03:26 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ 'ಅಭಿಮಾನೋತ್ಸವ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವಿಶೇಷತೆಯೆಂದರೆ, ವಾಹನ ನಿಲುಗಡೆ ಸ್ಥಳಗಳಿಗೆ ಕಾವೇರಿ, ವೇದಾವತಿ, ಭದ್ರಾ, ತುಂಗಾ ಎಂಬ ನದಿಗಳ ಹೆಸರಿಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5k9enjcd1c0hmnt913s858,imgname-----------------------2026-05-09t105419.356-1778304465586.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಡೇಕುಂಟೆ ಮಂಜುನಾಥ್&lt;/strong&gt;&lt;/p&gt;&lt;p&gt;ಚಿತ್ರದುರ್ಗ (ಮೇ.9): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕಾರಣಕ್ಕೆ ಬಂದು 50 ವರ್ಷ ತುಂಬಿದ ಹಿನ್ನೆಲೆ ಚಿತ್ರದುರ್ಗದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಹಿಂಭಾಗದ ವಿಶಾಲ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಆಯೋಜಿಸಿರುವ ಅಭಿಮಾನೋತ್ಸವ ಎಂಬ ವಿನೂತನ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳು, ಕಾರ್ಯಕರ್ತರ ವಾಹನಗಳೂ ಸೇರಿದಂತೆ ವಿಐಪಿ, ವಿವಿಐಪಿಗಳ ವಾಹನ ನಿಲುಗಡೆಯ ಸ್ಥಳಗಳಿಗೆ ನಾಡಿನ ಪ್ರಮುಖ ನದಿಗಳ ಹೆಸರುಗಳನ್ನು ಸೂಚಿಸುವ ಮೂಲಕ ಪೋಲೀಸ್ ಇಲಾಖೆ ನಾಡಿನ ಹಿರಿಮೆಯನ್ನು ಸಾರುವ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸಕ್ಕೆ ಮುಂದಾಗಿದೆ.&lt;/p&gt;&lt;p&gt;ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಹಾವೇರಿ ಕಡೆಯಿಂದ ಬರುವ ವಾಹನಗಳಿಗೆ ದಾವಣಗೆರೆ ರಸ್ತೆಯ ಮಡಿವಾಳ ಮಾಚಿದೇವ ಮಠದ ಕಡೆಗೆ ವೇದಾವತಿ ವಾಹನ ನಿಲುಗಡೆ ಪ್ರದೇಶ ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಬೃಹತ್ ವೇದಿಕೆ ಬಲಭಾಗದ ಹಿಂಭಾಗದಲ್ಲಿ ವಿಐಪಿ, ವಿವಿಐಪಿಗಳಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಈ ಪ್ರದೇಶಕ್ಕೆ ಕಾವೇರಿ ಎಂದು ನಾಮಕರಣ ಮಾಡಲಾಗಿದೆ.&lt;/p&gt;&lt;p&gt;ಬೆಂಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು ಕಡೆಗಳಿಂದ ಬರುವ ವಾಹನಗಳಿಗೆ ಎಸ್ ಜೆ ಎಂ ಹೆಲಿಪ್ಯಾಡ್ ಹಿಂಭಾಗದ ಮೂರು ಎಕರೆ ಪ್ರದೇಶದಲ್ಲಿ ಭದ್ರಾ ಹೆಸರಿನ ನಿಲುಗಡೆ ಪ್ರದೇಶವನ್ನು ಮೀಸಲಿಡಲಾಗಿದೆ.&lt;/p&gt;&lt;p&gt;ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಕಡೆಗಳಿಂದ ಬರುವ ವಾಹನಗಳಿಗೆ ಈಚಲನಾಗೇನಹಳ್ಳಿ ಹತ್ತಿರ ತುಂಗಾ ಹೆಸರಿನ ನಿಲುಗಡೆ ಪ್ರದೇಶದಲ್ಲಿ ವ್ಯವಸ್ಥೆ ಮಾಡಲಾಗಿದೆ.&lt;/p&gt;&lt;h2&gt;ವೇದಿಕೆ ಹತ್ತಿರವೇ ಹೆಲಿಪ್ಯಾಡ್:&lt;/h2&gt;&lt;p&gt;ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಸಿ ನೇರವಾಗಿ ಶಿವಮೊಗ್ಗದ ವಿಮಾನ ನಿಲ್ಧಾಣಕ್ಕೆ ಬಂದಿಳಿದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ಪ್ರೇವೇಶಿಸಲಿದ್ದಾರೆ. ಇದಕ್ಕಾಗಿಯೇ ಮಾದಾರ ಚೆನ್ನಯ್ಯ ಮಠದ ಹತ್ತಿರ ಅಂದರೆ ಹಿಂಭಾಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು. ಯಾವುದೇ ಸಾರ್ವಜನಿಕ ಕಿರಿಕಿರಿಗೆ ಅವಕಾಶ ನೀಡದೇ ನೇರವಾಗಿ ವೇದಿಕೆಗೆ ಕರೆತರಲಾಗುವುದು ಎಂದು ಸಂಘಟಕರು ಹೇಳಿದ್ದಾರೆ.&lt;/p&gt;&lt;p&gt;ಚಳ್ಳಕೆರೆ ಗೇಟ್ ಹತ್ತಿರ ಮುರುಘರಾಜೇಂದ್ರ ಕ್ರೀಡಾಂಗಣ ಮತ್ತು ಎಸ್ ಜೆ ಎಂ ಕ್ರೀಡಾಂಗಣ ಎರಡು ಹೆಲಿಪ್ಯಾಡ್ ಗಳು ಇದ್ದರೂ ಹೊಸದಾಗಿ ನಿರ್ಮಿಸಿರುವ ವೇದಿಕೆ ಹಿಂಭಾಗದ ಹೆಲಿಪ್ಯಾಡ್ ನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಂದಿಳಿಯಲಿದ್ದಾರೆ.&lt;/p&gt;&lt;h3&gt;ಬೃಹತ್ ಕಟೌಟುಗಳು:&lt;/h3&gt;&lt;p&gt;ಯಡಿಯೂರಪ್ಪ ಅವರ ಬಣ್ಣ ಬಣ್ಣದ ಕಟೌಟ್ ಗಳು, ಪ್ಲೆಕ್ಸ್&zwnj;ಗಳು, ಕೇಸರಿ ಬಣ್ಣದಲ್ಲಿ ವಿವಿಧ ಅಲಂಕಾರಗಳನ್ನು ಮಾಡಲಾಗಿದೆ. ಯಡಿಯೂರಪ್ಪ ಅವರ ಜೊತೆಗೆ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ, ಬಿ.ವೈ.ವಿಜಯೇಂದ್ರ ಅವರ ಕಟೌಟುಗಳು ಎಲ್ಲರ ಗಮನಸೆಳೆಯುತ್ತಿವೆ. ಮಾದಾರ ಚೆನ್ನಯ್ಯ ಗುರುಪೀಠದ ಸರ್ವಿಸ್ ರಸ್ತೆಯಿಂದ ಸೀದಾ ವೇದಿಕೆಗೆ ಹೋಗಲು ಮುಖ್ಯ ದ್ವಾರವನ್ನು ಹೊಕ್ಕು ಒಳಹೋಗುತ್ತಿದ್ದರೆ ಯಾವುದೋ ಬೇರೆ ಲೋಕಕ್ಕೆ ಹೋಗುತ್ತಿದ್ದೇವಾ ಎಂಬಷ್ಟರ ಮಟ್ಟಿಗೆ ವಿಜೃಂಭಣೆಯಿಂದ ಅಲಕಾಂರ ಮಾಡಲಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bsy-abhimanotsava-in-chitradurga-parking-zones-named-karnataka-s-rivers-rav/articleshow-5uxvl47"/>
        </item>
        <item>
            <title><![CDATA[ಬೆಂಗಳೂರು: ಸಂಸಾರ ತ್ಯಜಿಸಿದ ಮಹಿಳೆ ಜತೆ ಚಿತ್ರದುರ್ಗ ಯುವಕನ ಲಿವ್-ಇನ್, ಪ್ರೇಮಕಥೆಯಲ್ಲಿ ಅನುಮಾನದ ಸಾವು!]]></title>
            <link>https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr</link>
            <guid isPermaLink="true">https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr</guid>
            <pubDate>Sat, 09 May 2026 12:34:28 +0530</pubDate>
            <description><![CDATA[ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಚಿತ್ರದುರ್ಗ ಮೂಲದ ಯುವಕ ತಿಪ್ಪೇಸ್ವಾಮಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ವಾಸಿಸುತ್ತಿದ್ದ ಆತನ ಸಾವಿಗೆ ಆಕೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jj94qynb58eq46thnazwnymz,imgname-Live-in-relationship-1737621240491.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು &lt;/strong&gt;ನಗರದ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ಬಗ್ಗೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.&lt;/p&gt;&lt;p&gt;ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಆತ ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆ, ದಾವಣಗೆರೆ ಮೂಲದ ಮಹಿಳೆಯೊಬ್ಬಳೊಂದಿಗೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿಬಳಿಕ ಇಬ್ಬರೂ ಒಂದೇ ಗಾರ್ಮೆಂಟ್ಸ್&zwnj;ನಲ್ಲಿ ಕೆಲಸ ಮಾಡುತ್ತಾ ಹತ್ತಿರವಾಗಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಲಿವ್-ಇನ್ ಸಂಬಂಧದಲ್ಲಿದ್ದು, ಶ್ರೀಗಂಧನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು.&lt;/p&gt;&lt;h2&gt;ಮದುವೆಯಾಗಿ ಇಬ್ಬರು ಮಕ್ಕಳ ತಾಯಿ&lt;/h2&gt;&lt;p&gt;ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ, ಆ ಮಹಿಳೆ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ಮನೆ ಮಾಲೀಕರಿಗೆ ನಾವಿಬ್ಬರೂ ಗಂಡ-ಹೆಂಡತಿ ಎಂದು ಹೇಳಿದ ಜೋಡಿ ತಿಂಗಳಿಗೆ ಸುಮಾರು 3 ಸಾವಿರ ರೂಪಾಯಿ ಬಾಡಿಗೆ ನೀಡಿ ಜೊತೆಯಾಗಿ ವಾಸಿಸುತ್ತಿದ್ದರು.&lt;/p&gt;&lt;h2&gt;ಇಬ್ಬರ ಮಧ್ಯೆ ಕಲಹ&lt;/h2&gt;&lt;p&gt;ಆದರೆ ಕೆಲ ದಿನಗಳಿಂದ ಜೋಡಿಗಳಿಬ್ಬರ ನಡುವೆ ಕಲಹ ಉಂಟಾಗಿತ್ತಂತೆ, &ldquo;ನನ್ನನ್ನು ನೋಡಿಕೊಳ್ಳಲು ಆಗುವುದಿಲ್ಲ, ನನ್ನನ್ನು ಬಿಟ್ಟುಬಿಡು&rdquo; ಎಂದು ಮಹಿಳೆ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮನನೊಂದ ತಿಪ್ಪೇಸ್ವಾಮಿ ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.&lt;/p&gt;&lt;p&gt;ಇದೇ ವೇಳೆ, ತಿಪ್ಪೇಸ್ವಾಮಿ ಸಾವಿಗೆ ಪ್ರಿಯಾಂಕಾ ಎಂಬ ಮಹಿಳೆಯೇ ಕಾರಣ ಎಂದು ಮೃತನ ಕುಟುಂಬಸ್ಥರು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-man-found-dead-in-suspected-death-live-in-bengaluru-partner-missing-gdp/articleshow-8sffecr"/>
        </item>
        <item>
            <title><![CDATA[ಭದ್ರಾಮೇಲ್ದಂಡೆ ಯೋಜನೆಯಿಂದ 37 ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆ ಘೋಷಿಸಿದ ಶಾಸಕ]]></title>
            <link>https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx</link>
            <guid isPermaLink="true">https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx</guid>
            <pubDate>Sat, 06 Jun 2026 07:34:46 +0530</pubDate>
            <description><![CDATA[ಶಾಸಕ ಡಾ.ಎಂ.ಚಂದ್ರಪ್ಪ ಅವರು ಭದ್ರಾಮೇಲ್ದಂಡೆ ಯೋಜನೆಯಡಿ ಹೊಳಲ್ಕೆರೆ ತಾಲೂಕಿನ 37 ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯನ್ನು ಘೋಷಿಸಿದ್ದಾರೆ. ಇದರೊಂದಿಗೆ, ದೊಗ್ಗನಾಳ್ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು, ತಾಲೂಕಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಯ ಬಗ್ಗೆಯೂ ಮಾಹಿತಿ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ktdar970gm141v7qrpnz67p4,imgname-holalkere-1780711433440.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಭದ್ರಾಮೇಲ್ದಂಡೆ ಯೋಜನೆಯಿಂದ ನೀರು ತಂದು ತಾಲೂಕಿನಲ್ಲಿರುವ 37 ಕೆರೆಗಳನ್ನು ತುಂಬಿಸುವ ದೊಡ್ಡ ಯೋಜನೆ ಕೈಗೆತ್ತಿಕೊಂಡಿದ್ದೇನೆ. ಇದರಿಂದ ಎಲ್ಲಾ ಕೆರೆಗಳು ತುಂಬಿ ಸಮಗ್ರ ನೀರಾವರಿಯಾಗಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.&lt;/p&gt;&lt;p&gt;ದೊಗ್ಗನಾಳ್ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ದೊಗ್ಗನಾಳ್ ಗ್ರಾಮದಿಂದ ಆರ್.ನುಲೇನೂರುವರೆಗೂ ನೂತನ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;h2&gt;&lt;strong&gt;ಭದ್ರಾ ಮೇಲ್ದಂಡೆ ಯೋಜನೆಗಾಗಿ ಹೋರಾಟ&lt;/strong&gt;&lt;/h2&gt;&lt;p&gt;ಹತ್ತಾರು ವರ್ಷಗಳ ಕಾಲ ಸಾಕಿ ಸಲಹಿದೆ ಅಡಿಕೆ ಮರ ಒಣಗಿದರೆ ರೈತರಿಗೆ ಎಷ್ಟು ನೋವಾಗುತ್ತದೆನ್ನುವುದನ್ನು ಅರ್ಥಮಾಡಿಕೊಂಡಿದ್ದೇನೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಕಾಲದಿಂದಲೂ ಭದ್ರಾ ಮೇಲ್ದಂಡೆ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರೆಸಿ ಗುದ್ದಲಿ ಪೂಜೆ ಮಾಡಿಸಿದ್ದೆ. ಆಗ 5300 ಕೋಟಿ ರು. ಗಳನ್ನು ನೀರಾವರಿ ಯೋಜನೆಗೆ ಖರ್ಚು ಮಾಡಬೇಕಿತ್ತು. ಈಗ 23 ಸಾವಿರ ಕೋಟಿ ರು.ಗಳಷ್ಟಾಗಿದೆ. ವರ್ಷದಿಂದ ವರ್ಷಕ್ಕೆ ಯೋಜನೆಯ ವೆಚ್ಚ ಜಾಸ್ತಿಯಾಗುತ್ತಿದೆ ಎಂದು ಹೇಳಿದರು.&lt;/p&gt;&lt;p&gt;ಕೆರೆಗೆ ಕಾಂಕ್ರಿಟ್ ವಾಲ್ ಹಾಕಿಸಿ ಏರಿ ರಿಪೇರಿಗಾಗಿ 2 ಕೋಟಿ ರು.ಗಳನ್ನು ಮಂಜೂರು ಮಾಡಿದ್ದೇನೆ. ಮೊದಲು ಅಭಿವೃದ್ಧಿಪಡಿಸಿ ನಂತರ ನೀರು ತುಂಬಿಸಲಾಗುವುದು.&lt;/p&gt;&lt;h3&gt;&lt;strong&gt;ವಾಣಿವಿಲಾಸ ಸಾಗರದಿಂದ ಶುದ್ಧ ಕುಡಿಯುವ ನೀರು&lt;/strong&gt;&lt;/h3&gt;&lt;p&gt;ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ತಾಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಹಿರಿಯೂರಿನ ವಾಣಿವಿಲಾಸ ಸಾಗರದಿಂದ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಅದಕ್ಕಾಗಿ 367 ಕೋಟಿ ರು. ಖರ್ಚು ಮಾಡಲಾಗಿದೆ. ರೈತರ ತೋಟಗಳು ಒಣಗಬಾರದೆಂದು 17 ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಬದ್ಧತೆ ಜವಾಬ್ದಾರಿಯಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಅಧಿಕಾರ ಇರುವಾಗ ಹತ್ತಾರು ಜನಕ್ಕೆ ಒಳ್ಳೆಯದು ಮಾಡಬೇಕೆಂಬುದು ನನ್ನ ಆಸೆ ಎಂದರು.&lt;/p&gt;&lt;p&gt;ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಣ್ಣ, ಜಿಪಂ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್, ತಿಪ್ಪೇಸ್ವಾಮಿ, ಅಜ್ಜಯ್ಯ, ನುಲೇನೂರು ಶೇಖರ್, ಪ್ರವೀಣ್ ರಮೇಶ್, ರಾಜಶೇಖರ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx"/>
        </item>
        <item>
            <title><![CDATA[MLC ಮಾಡುವಂತೆ ಯಾರನ್ನೂ ಕೋರಿಲ್ಲ, ನಿಷ್ಠಾವಂತರಿಗೆ ಅವಕಾಶ ನೀಡಿ: ಎಚ್.ಆಂಜನೇಯ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e</link>
            <guid isPermaLink="true">https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e</guid>
            <pubDate>Mon, 15 Jun 2026 23:28:09 +0530</pubDate>
            <description><![CDATA[&lt;p&gt;Congress Karnataka: ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k0zehg6269zvhnhb7ch7tck4,imgname-fbf-1753402097858.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜೂ.15):&lt;/strong&gt; ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ.ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ನಮ್ಮನ್ನು ಕಡೆಗಣಿಸಿಲ್ಲ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ಮುಂದುವರಿಸುತ್ತೇನೆ ಎಂದರು.&lt;/p&gt;&lt;p&gt;ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್&zwj;ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ಸಾಕ್ಷೀಕರಿಸಲು ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಕಲ ವ್ಯವಸ್ಧೆ ಮಾಡಿಕೊಳ್ಳಲಾಗಿದೆ ಎಂದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.&lt;/p&gt;&lt;p&gt;ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್&zwj;ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್&zwj;ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು.&lt;/p&gt;&lt;p&gt;ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಆಂಜನೇಯಮನವಿ ಮಾಡಿದರು.&lt;/p&gt;&lt;h2&gt;&lt;strong&gt;ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ&lt;/strong&gt;&lt;/h2&gt;&lt;p&gt;ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೆಲ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e"/>
        </item>
        <item>
            <title><![CDATA[ನಮ್ಮ ಸಾವು ಯಾವಾಗ ಗೊತ್ತಿಲ್ಲ, ಕೊನೆ ಕಾರ್ಯಕ್ರಮದಲ್ಲಿ ಮೃತ್ಯು ಬಗ್ಗೆ ಮಾತನಾಡಿದ್ದ ಸಚಿವ ಡಿ ಸುಧಾಕರ್]]></title>
            <link>https://kannada.asianetnews.com/state/minister-d-sudhakar-final-speech-on-life-and-death-goes-viral-after-tragic-demise/articleshow-9xg7s11</link>
            <guid isPermaLink="true">https://kannada.asianetnews.com/state/minister-d-sudhakar-final-speech-on-life-and-death-goes-viral-after-tragic-demise/articleshow-9xg7s11</guid>
            <pubDate>Mon, 11 May 2026 07:26:09 +0530</pubDate>
            <description><![CDATA[&lt;p&gt;ಅನಾರೋಗ್ಯದಿಂದ ವಿಧಿವಶರಾದ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ ಇಂದು ನಡೆಯಲಿದೆ. ಆದೆರೆ ಸಚಿವ ಭಾಗವಹಿಸಿದ್ದ ಕೊನೆಯ ಕಾರ್ಯಕ್ರಮದಲ್ಲಿ ಸಾವಿನ ಕುರಿತು ಮಾರ್ಮಿಕವಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿದೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr7qmm78f98ykjhm6adnhjng,imgname-d-sudhakar--3--1778376134888.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮೇ.11) &lt;/strong&gt;ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿ ನಿಧನರಾದ ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ಅಂತ್ಯಕ್ರಿಯ ಇಂದು ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ಚಳ್ಳಕೆರೆಯ ಡಿ ಸುಧಾಕರ್ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸುಧಾಕರ್ ಅವರ ಸೆಟಲ್ ಕಾಕ್ ಕೋಟ್&zwnj;ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಚಿವ ಡಿ ಸುಧಾಕರ್ ಭಾಗವಹಿಸಿದ್ದ ಕೊನೆಯ ಕಾರ್ಯಕ್ರಮದ ವಿಡಿಯೋ ಇದೀಗ ಹರಿದಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ತಮ್ಮ ಸಾವು ಯಾವಗ ಗೊತ್ತಿಲ್ಲ, ನಾವು ನಾಳೆ ಇರುತ್ತೀವೋ ಇಲ್ಲವೋ ಅನ್ನೋದು ಗೊತ್ತಿಲ್ಲ ಎಂದು ಮಾರ್ವಿಕವಾಗಿ ಸಾವಿನ ಕುರಿತು ಮಾತನಾಡಿದ್ದರು.&lt;/p&gt;&lt;p&gt;ಸಚಿವ ಡಿ ಸುಧಾಕರ್ ಭಾಗವಹಿಸಿದ ಹಾಗೂ ಭಾಷಣ ಮಾಡಿದ ಕೊನೆಯ ಕಾರ್ಯಕ್ರಮ ಹಿರಿಯೂರು ಪಟ್ಟಣದಲ್ಲಿನ ಶಾರದಾ ಆಶ್ರಮದ ಭೂಮಿಪೂಜೆ ಕಾರ್ಯಕ್ರಮ. ಭೂಮಿಪೂಜೆ ನೆರವೇರಿಸಿದ್ದ ಡಿ ಸುಧಾಕರ್, ಬಳಿಕ ಸಾರ್ವಜನಿಕರ ಉದ್ದೇಶಿ ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ ಸುಧಾಕರ್ ಮಾಡಿದ್ದ ಭಾಷಣ ಕೊನೆಯದ್ದಾಗುತ್ತೆ ಎಂದು ಯಾರು ಊಹಿಸಿರಲಿಲ್ಲ. ಈ ಭಾಷಣದಲ್ಲಿ ಸುಧಾಕರ್ ಮೃತ್ಯು ಕುರಿತು ಮಾತನಾಡಿದ್ದಾರೆ.&lt;/p&gt;&lt;h2&gt;ಇರುವಷ್ಟು ದಿನ ಭಗವಂತನ ಸ್ಮರಣೆ ಮಾಡಿ&lt;/h2&gt;&lt;p&gt;ಭಗವಂತನ ಸ್ಮರಣೆ,ಸ ಧಾರ್ಮಿಕತೆ ಕುರಿತು ಮಾತನಾಡಿದ ಡಿ ಸುಧಾಕರ್, ನಾವು ಇವತ್ತು ಇರುತ್ತಿವೋ ಇಲ್ಲವೋ ಗೊತ್ತಿಲ್ಲ, ನಮ್ಮ ಸಾವು ಯಾವಾಗ ಅನ್ನೋದು ಗೊತ್ತಿಲ್ಲ. ಹೀಗಾಗಿ ನಾವು ಒಂದು ರೀತಿ ಉರಿಯುವ ಬಲ್ಬ್ ಇದ್ದಂತೆ ಯಾವಾಗ ಆಫ್ ಆಗುತ್ತೋ ಗೊತ್ತಿಲ್ಲ. ಇರುವಷ್ಟು ದಿನ ಧಾರ್ಮಿಕವಾಗಿ ಭಗವಂತನ ಸ್ಮರಣೆಯಲ್ಲಿ ಇರಬೇಕು. ಒಬ್ಬೊಬ್ಬರದ್ದು ಒಂದೊಂದು ನಂಬಿಕೆ, ಭಗವಂತ ಇದ್ದಾನೆ. ಕಾಯಕವೇ ಕೈಲಾಸ ಅಂತಾರೆ. ಕೆಲವರು ಪರೋಪಕಾರವೇ ಭಗವಂತನ ಸ್ಮರಣೆ ಎನ್ನುತ್ತಾರೆ ಎಂದು ಸುಧಾಕರ್ ಮಾತನಾಡಿದ್ದಾರೆ.&lt;/p&gt;&lt;p&gt;ಸಚಿವ ಮೊಣಕಾಲು ಆಪರೇಶನ್&zwnj;ಗೆ ತೆರಳುವ ಮುಂದಿನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಮೊಣಕಾಲು ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಡಿ ಸುಧಾಕರ್&zwnj;ಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿತ್ತು. ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಡಿ ಸುಧಾಕರ್ ಸ್ಥಳಾಂತರ ಮಾಡಲಾಗಿತ್ತು. ಆದರೆ ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ ಕಾಣದ ವಿಧಿವಶರಾಗಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>chitradurga</category>
            <dc:creator>Chethan Kumar</dc:creator>
            <atom:link href="https://kannada.asianetnews.com/state/minister-d-sudhakar-final-speech-on-life-and-death-goes-viral-after-tragic-demise/articleshow-9xg7s11"/>
        </item>
        <item>
            <title><![CDATA[ಸರ್ಕಾರಿ ಗೌರವದ ಜತೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ]]></title>
            <link>https://kannada.asianetnews.com/state/minister-d-sudhakar-s-funeral-today-with-state-honours-in-challakere-mrq/articleshow-donmzkg</link>
            <guid isPermaLink="true">https://kannada.asianetnews.com/state/minister-d-sudhakar-s-funeral-today-with-state-honours-in-challakere-mrq/articleshow-donmzkg</guid>
            <pubDate>Mon, 11 May 2026 06:12:27 +0530</pubDate>
            <description><![CDATA[ಭಾನುವಾರ ನಿಧನರಾದ ಸಚಿವ ಡಿ.ಸುಧಾಕರ್ ಅವರ ಅಂತ್ಯ ಸಂಸ್ಕಾರವು ಸೋಮವಾರ ಮಧ್ಯಾಹ್ನ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7qmm773k2vpsezezd6ydjq,imgname-d-sudhakar--1--1778376134887.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ&lt;/strong&gt;: ಭಾನುವಾರ ಮುಂಜಾನೆ ನಿಧನ ಹೊಂದಿದ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಅವರ ನಿವಾಸ, &lsquo;ಗೊಮ್ಮಟ ನಿಲಯ&rsquo;ಕ್ಕೆ ತರಲಾಗಿದ್ದು, ಸೋಮವಾರ ಮಧ್ಯಾಹ್ನ 4 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.&lt;/p&gt;&lt;p&gt;ಇದಕ್ಕೂ ಮೊದಲು, ಸೋಮವಾರ ಬೆಳಗ್ಗೆ ಸಚಿವರ ಸ್ವಂತ ಮನೆ ಗೊಮ್ಮಟ ನಿಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಬಳಿಕ, ಚಳ್ಳಕೆರೆ ಎಚ್&zwnj;ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ.ಸುಧಾಕರ್ ಮೈದಾನಕ್ಕೆ ಮೃತದೇಹ ಕೊಂಡೊಯ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ನಂತರ ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗ ರಸ್ತೆಯ ವಿಠ್ಠಲ ನಗರದಲ್ಲಿರುವ ಶಾಂತಕುಮಾರ್ ಮೆಮೋರಿಯಲ್ ಶೆಟಲ್ ಕೋರ್ಟ್ ಆವರಣಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗುವುದು. ಬಳಿಕ, ಸಕಲ ಸರ್ಕಾರಿ ಗೌರವಗಳೊಂದಿಗೆ, ಜೈನ ಧರ್ಮದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.&lt;/p&gt;&lt;p&gt;ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ &zwnj;ಸಿಂಗ್ ಸುರ್ಜೆವಾಲ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಶಾಸಕರು, ಮಂತ್ರಿಗಳು, ಮುಖಂಡರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.&lt;/p&gt;&lt;h2&gt;&lt;strong&gt;ಸಚಿವ ಸುಧಾಕರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ&lt;/strong&gt;&lt;/h2&gt;&lt;p&gt;ಚಳ್ಳಕೆರೆ: ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ನಿಧನಕ್ಕೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮನ್ನು ಸುಧಾಕರ್ ಅಪ್ಪಿಕೊಂಡಿದ್ದ ಫೋಟೋವನ್ನು ಎಕ್ಸ್&zwnj;ನಲ್ಲಿ ಅವರು ಹಂಚಿಕೊಂಡಿದ್ದಾರೆ. ಸುಧಾಕರ್ ಬಡವರ ಪರ ಇದ್ದವರು. ಇವರ ಅಕಾಲಿಕ ಸಾವು ತಮಗೆ ಅತೀವ ನೋವು ತಂದಿದೆ ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಸುಧಾಕರ್&zwnj; ನಿಧನ ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ&lt;/strong&gt;&lt;/h3&gt;&lt;p&gt;ಸಚಿವ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ಮೇ 10 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಪ್ರಕಟಿಸಿದ್ದು, ಮೇ 11 ರಂದು ಸೋಮವಾರ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.&lt;/p&gt;&lt;p&gt;ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಚಿತ್ರದುರ್ಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಸುಧಾಕರ್&zwnj; ನಿಧನದ ಹಿನ್ನೆಲೆ ಮೇ 11 ರಂದು ಸೋಮವಾರ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಕಚೇರಿಗಳು, ಎಲ್ಲಾ ಶಾಲಾ ಕಾಲೇಜುಗಳು (ಅನುದಾನ ಪಡೆಯುವ ಎಲ್ಲಾ ವಿದ್ಯಾಸಂಸ್ಥೆ ಸೇರಿ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.&lt;/p&gt;&lt;p&gt;ಮೇ 10 ರಿಂದ ಮೇ 12 ರವರೆಗೆ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಮಗಳು ಇರುವುದಿಲ್ಲ. ಕಟ್ಟಡಗಳ ಮೇ&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/minister-d-sudhakar-s-funeral-today-with-state-honours-in-challakere-mrq/articleshow-donmzkg"/>
        </item>
        <item>
            <title><![CDATA[Renukaswamy Family: ನಟ ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೀಡಾದ ರೇಣುಕಾಸ್ವಾಮಿ ಕುಟುಂಬದಲ್ಲಿ ಮತ್ತೊಂದು ಸೂತಕ!]]></title>
            <link>https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9</link>
            <guid isPermaLink="true">https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9</guid>
            <pubDate>Wed, 17 Jun 2026 17:31:07 +0530</pubDate>
            <description><![CDATA[&lt;p&gt;ನಟ ದರ್ಶನ್ ಗ್ಯಾಂಗ್&zwnj;ನಿಂದ (Darshan Gang) ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಕುಟುಂಬದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೊಮ್ಮಗನ ಸಾವಿನ ನೋವಿನಿಂದ ಬಳಲುತ್ತಿದ್ದ ಶತಾಯುಷಿ ಅಜ್ಜಿ ಪ್ರಮೀಳಾದೇವಿ (100) ವಿಧಿವಶರಾಗಿದ್ದಾರೆ. ಈಗಾಗಲೇ ದುಃಖದಲ್ಲಿರುವ ಕುಟುಂಬದಲ್ಲಿ ಮತ್ತೆ ಶೋಕ ಆವರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvapze4n37mbnqh8cqynkt9c,imgname-renukaswamy-grand-mother-death-1781697329301.jpg" type="image/jpeg" height="390" width="690"/>
            <content:encoded><![CDATA[&lt;p&gt;ನಟ ದರ್ಶನ್ ಗ್ಯಾಂಗ್&zwnj;ನಿಂದ (Darshan Gang) ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಕುಟುಂಬದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೊಮ್ಮಗನ ಸಾವಿನ ನೋವಿನಿಂದ ಬಳಲುತ್ತಿದ್ದ ಶತಾಯುಷಿ ಅಜ್ಜಿ ಪ್ರಮೀಳಾದೇವಿ (100) ವಿಧಿವಶರಾಗಿದ್ದಾರೆ. ಈಗಾಗಲೇ ದುಃಖದಲ್ಲಿರುವ ಕುಟುಂಬದಲ್ಲಿ ಮತ್ತೆ ಶೋಕ ಆವರಿಸಿದೆ.&lt;/p&gt;&lt;img&gt;&lt;p&gt;&lt;strong&gt;ಚಿತ್ರದುರ್ಗ (ಜೂ.17): ನ&lt;/strong&gt;ಟ ದರ್ಶನ್ ಮತ್ತು ಗ್ಯಾಂಗ್&zwnj;ನಿಂದ ಬರ್ಬರವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬದಲ್ಲಿ ಮತ್ತೊಂದು ಶೋಕದ ಛಾಯೆ ಆವರಿಸಿದೆ. ರೇಣುಕಾಸ್ವಾಮಿ ಅವರ ಅಜ್ಜಿ, ಶತಾಯುಷಿ ಪ್ರಮೀಳಾದೇವಿ (100) ಅವರು ಇಂದು ವಿಧಿವಶರಾಗಿದ್ದಾರೆ. ಮೊಮ್ಮಗನ ಅಕಾಲಿಕ ಹಾಗೂ ಕ್ರೂರ ಸಾವಿನ ನೋವಿನಿಂದ ಅವರು ತೀವ್ರವಾಗಿ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಗಾಯದ ಮೇಲೆ ಬರೆ:&lt;/strong&gt;&lt;/p&gt;&lt;p&gt;ರೇಣುಕಾಸ್ವಾಮಿ ಕೊಲೆಯಾದ ನಂತರ ಆತನ ತಂದೆ-ತಾಯಿ ಮತ್ತು ಪತ್ನಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಈ ಮಧ್ಯೆ ಮನೆಯ ಹಿರಿಯ ಜೀವವಾಗಿದ್ದ ಪ್ರಮೀಳಾದೇವಿಯವರು ವಯೋಸಹಜ ಅನಾರೋಗ್ಯದ ಜೊತೆಗೆ ಮೊಮ್ಮಗನ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದರು. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ಅಂತಿಮ ಸಂಸ್ಕಾರದ ವಿವರ:&lt;/p&gt;&lt;p&gt;ಪ್ರಮೀಳಾದೇವಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಚಿತ್ರದುರ್ಗದ ಅವರ ನಿವಾಸದ ಬಳಿ ಇಂದು ಮಧ್ಯಾಹ್ನ 4 ಗಂಟೆಯವರೆಗೆ ಇರಿಸಲಾಗುತ್ತದೆ. ತದನಂತರ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ನೆರವೇರಲಿವೆ. ಮೃತರು ರೇಣುಕಾಸ್ವಾಮಿಯ ತಂದೆ ಶಿವನಗೌಡ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.&lt;/p&gt;&lt;img&gt;&lt;p&gt;ಒಂದೆಡೆ ಮಗನ ಸಾವಿನ ಆಘಾತದಿಂದ ಇನ್ನೂ ಹೊರಬರದ ಶಿವನಗೌಡ ಅವರಿಗೆ ಈಗ ತಾಯಿಯ ಅಗಲಿಕೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ರೇಣುಕಾಸ್ವಾಮಿ ಪ್ರಕರಣದ ಹಿನ್ನೆಲೆಯಲ್ಲಿ ಇಡೀ ಕುಟುಂಬ ಈಗಾಗಲೇ ಕುಸಿದು ಹೋಗಿದ್ದು, ಇದೀಗ ಮತ್ತೊಂದು ಸಾವು ಕುಟುಂಬವನ್ನು ಮತ್ತಷ್ಟು ಸಂಕಷ್ಟಕ್ಕೆ ಈಡುಮಾಡಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9"/>
        </item>
        <item>
            <title><![CDATA[BSY 50 years in politics: ಚಿತ್ರದುರ್ಗದಲ್ಲಿ ವೈಭವದ ಅಭಿಮಾನೋತ್ಸವ, ದಕ್ಷಿಣಕ್ಕೊಬ್ಬರೇ ಯಡಿಯೂರಪ್ಪ -ಶಾ!]]></title>
            <link>https://kannada.asianetnews.com/politics/bsy-abhimanotsav-grand-event-yadiyurappa-only-one-for-the-south-praises-amit-shah-rav/articleshow-gp2fv4x</link>
            <guid isPermaLink="true">https://kannada.asianetnews.com/politics/bsy-abhimanotsav-grand-event-yadiyurappa-only-one-for-the-south-praises-amit-shah-rav/articleshow-gp2fv4x</guid>
            <pubDate>Sun, 10 May 2026 04:51:39 +0530</pubDate>
            <description><![CDATA[ಚಿತ್ರದುರ್ಗದಲ್ಲಿ ನಡೆದ 'ಬಿಎಸ್&zwnj;ವೈ ಅಭಿಮಾನೋತ್ಸವ'ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಅವರು ಬಿ.ಎಸ್&zwnj;.ಯಡಿಯೂರಪ್ಪರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರೇ ಕಾರಣ, ಅವರ ಹೋರಾಟದ ಬದುಕು ಯುವಕರಿಗೆ ಮಾದರಿ ಎಂದು ಕೊಂಡಾಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr7g5pbrvjbkhx93trfr8gmj,imgname-----------------------2026-05-10t044127.685-1778368305528.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಮೇ.10): &lt;/strong&gt;ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿ.ಎಸ್&zwnj;.ಯಡಿಯೂರಪ್ಪ ಕಾರಣ. ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರ ದಾಖಲೆ ಬರೆಯುವಾಗ ಯಡಿಯೂರಪ್ಪ ಅವರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್&zwnj; ಶಾ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.&lt;/p&gt;&lt;p&gt;ಮಾಜಿ ಮುಖ್ಯಮಂತ್ರಿ ಬಿ.ಎಸ್&zwnj;.ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣೋತ್ಸವ ಪ್ರಯುಕ್ತ ಶನಿವಾರ ಚಿತ್ರದುರ್ಗದಲ್ಲಿ ಆಯೋಜಿಸಿದ್ದ &lsquo;ಬಿಎಸ್&zwnj;ವೈ ಅಭಿಮಾನೋತ್ಸವ&rsquo;ದಲ್ಲಿ ಪಾಲ್ಗೊಂಡು ಮಾತನಾಡಿ, ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪ ಅವರ ಐದು ದಶಕಗಳ ಸಾರ್ವಜನಿಕ ಜೀವನ ಹಾಗೂ ಹೋರಾಟಗಳು ಯುವ ಜನತೆಗೆ ಮಾದರಿ ಎಂದು ಮೆಚ್ಚುಗೆ ಸೂಚಿಸಿದರು.&lt;/p&gt;&lt;p&gt;ಯಡಿಯೂರಪ್ಪ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಸಂಘರ್ಷಗಳ ನಡುವೆ ದಕ್ಷಿಣ ಭಾರತದ ಬಿಜೆಪಿಯ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರಲ್ಲಿ ಯಡಿಯೂರಪ್ಪ ಅವರಂತಹ ಮತ್ತೊಬ್ಬ ನಾಯಕನಿಲ್ಲ. ರೈತನ ಮಗನಾಗಿ ಹುಟ್ಟಿದ ಯಡಿಯೂರಪ್ಪ ಅವರು ಕ್ಲರ್ಕ್&zwnj; ಆಗಿ, ರೈಸ್&zwnj; ಮಿಲ್&zwnj;ನಲ್ಲಿ ಕೆಲಸ ಮಾಡಿ ಬಳಿಕ ಸಾರ್ವಜನಿಕ ಜೀವನಕ್ಕೆ ಬಂದವರು ಎಂದು ಪ್ರಶಂಸೆ ವ್ಯಕ್ತಪಡಿಸಿದರು.&lt;/p&gt;&lt;p&gt;ಶಿಕಾರಿಪುರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿ, ಹೋರಾಟಗಳ ಮುಖಾಂತರ ದೊಡ್ಡ ನಾಯಕನಾಗಿ ಬೆಳೆದವರು. ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಪ್ರಥಮ ಬಾರಿಗೆ ಅಧಿಕಾರದ ಬಾಗಿಲು ತೆರೆದವರು. ಇಂಥ ಯಡಿಯೂರಪ್ಪ ಅವರಿಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಸೌಭಾಗ್ಯ ಸಿಕ್ಕಿದೆ ಎಂದು ಕೊಂಡಾಡಿದರು.&lt;/p&gt;&lt;h2&gt;ರೈತರ ಕಲ್ಯಾಣಕ್ಕೆ ಶ್ರಮ:&lt;/h2&gt;&lt;p&gt;ರೈತರ ಕಲ್ಯಾಣವಾದರೆ, ರಾಜ್ಯದ ಕಲ್ಯಾಣವಾಗುತ್ತದೆ ಎಂದು ದೇಶದಲ್ಲೇ ಮೊದಲ ಬಾರಿ ಪ್ರತ್ಯೇಕ ಕೃಷಿ ಬಜೆಟ್&zwnj; ಮಂಡಿಸಿದವರು ಬಿ.ಎಸ್&zwnj;.ಯಡಿಯೂರಪ್ಪ. ಈ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಐವತ್ತು ವರ್ಷಗಳ ಕಾಲ ಜನಸೇವೆ ಮತ್ತು ರೈತರ ಕಲ್ಯಾಣಕ್ಕಾಗಿ ದುಡಿದಿದ್ದಾರೆ. ಸಾಮಾನ್ಯವಾಗಿ ಎರಡು ರೀತಿಯ ನಾಯಕರು ಇರುತ್ತಾರೆ. ಇರುವ ರಸ್ತೆಯಲ್ಲಿ ಚಲಿಸುವವರು ಮತ್ತು ಹೊಸ ಮಾರ್ಗದಲ್ಲಿ ಚಲಿಸುವವರು. ಯಡಿಯೂರಪ್ಪ ಅವರು ತಮ್ಮದೇ ಆದ ಪ್ರತ್ಯೇಕ ಹಾದಿ ಸೃಷ್ಟಿಸಿ ಇತರರಿಗೂ ದಾರಿ ತೋರಿಸಿಕೊಟ್ಟವರು. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಸಾಧಾರಣ ಕುಟುಂಬದಿಂದ ಬಂದು ಇಚ್ಛಾಶಕ್ತಿ, ಸಂಘದ ಸಂಸ್ಕಾರ, ರಾಷ್ಟ್ರಭಕ್ತಿ, ಸೈದ್ಧಾಂತಿಕ ನಿಲುವುಗಳೊಂದಿಗೆ ಅವರು ದೊಡ್ಡ ನಾಯಕನಾಗಿ ಬೆಳೆದಿದ್ದಾರೆ ಎಂದು ಶ್ಲಾಘಿಸಿದರು.&lt;/p&gt;&lt;p&gt;ಬಸ್&zwnj; ಸಿಗದಿದ್ದಾಗ ಸೈಕಲ್&zwnj;ನಲ್ಲಿ ರಾಜ್ಯದ ಹಳ್ಳಿ ಹಳ್ಳಿಗೆ ಸುತ್ತಾಡಿ ಬಿಜೆಪಿಯನ್ನು ಸದೃಢವಾಗಿ ಕಟ್ಟಿದ್ದಾರೆ. ರೈತರ ಪರವಾಗಿ ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಹೋರಾಟ ಮಾಡಿದ್ದಾರೆ. ಈ ಮುಖಾಂತರ ರೈತ ನಾಯಕನಾಗಿ ಹೊರಹೊಮ್ಮಿದ್ದಾರೆ. ತಮ್ಮ ಹೋರಾಟ ದಿನಗಳಲ್ಲಿ ಜೈಲುವಾಸವನ್ನೂ ಅನುಭವಿಸಿದ್ದಾರೆ ಎಂದು ಯಡಿಯೂರಪ್ಪ ಅವರ ಬದುಕು ಮತ್ತು ಸಾಧನೆಗಳನ್ನು ಸ್ಮರಿಸಿದರು.&lt;/p&gt;&lt;p&gt;ನಾನು 2014ರಿಂದಲೂ ಕರ್ನಾಟಕಕ್ಕೆ ಬರುತ್ತಿದ್ದೇನೆ. ಎಲ್ಲ ಮತ-ಸಂಪ್ರದಾಯಗಳ ಸ್ವಾಮೀಜಿಗಳು ಈ ವೇದಿಕೆಯಲ್ಲಿದ್ದಾರೆ. ಇದು ಯಡಿಯೂರಪ್ಪ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ತೋರಿಸುತ್ತದೆ. ಯಡಿಯೂರಪ್ಪ ಅವರದು ಮಾದರಿ ಜೀವನ. ನಾನು ಯಡಿಯೂರಪ್ಪ ಅವರ ಪರ ಮೂರು ಚುನಾವಣೆಗಳಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಜನರು ಸಮಸ್ಯೆಗಳನ್ನು ಹೇಳಿಕೊಂಡಾಗ ಯಡಿಯೂರಪ್ಪ ಅವರು ಅದನ್ನು ಸಣ್ಣ ಡೈರಿಯಲ್ಲಿ ಬರೆದುಕೊಳ್ಳುವುದನ್ನು ನೋಡಿದ್ದೇನೆ. ಸಣ್ಣ ಸಮಸ್ಯೆಗಳಿಗೂ ಅವರು ಸ್ಪಂದಿಸುವ ಗುಣವನ್ನು ಕಣ್ಣಾರೆ ಕಂಡಿದ್ದೇನೆ ಎಂದು ಯಡಿಯೂರಪ್ಪ ಅವರ ಕಾರ್ಯ ವೈಖರಿಯನ್ನು ಅಮಿತ್ ಶಾ ಗುಣಗಾನ ಮಾಡಿದರು.&lt;/p&gt;&lt;h3&gt;ಕೇಂದ್ರ ಸಚಿವರಾಗುವ ಅವಕಾಶವಿತ್ತು:&lt;/h3&gt;&lt;p&gt;ಇವತ್ತು ಬೆಂಗಳೂರು ಗ್ಲೋಬಲ್&zwnj; ಟೆಕ್&zwnj; ನಗರವಾಗಿ ಬೆಳೆಯುವಲ್ಲಿ ಯಡಿಯೂರಪ್ಪ ಅವರ ಪಾತ್ರ ದೊಡ್ಡದಿದೆ. ಅವರ ಅವಧಿಯಲ್ಲಿ ಕರ್ನಾಟಕ ಅಭಿವೃದ್ಧಿ ಸಾಧಿಸಿದೆ. ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ರಾಜ್ಯದ ಅಭಿವೃದ್ಧಿಗಾಗಿ ಸಾಕಷ್ಟು ದುಡಿದಿದ್ದಾರೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಯಡಿಯೂರಪ್ಪ ಅವರಿಗೆ ಸಚಿವರಾಗುವ ಅವಕಾಶವಿತ್ತು. ಆದರೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡಬೇಕು ಎಂದು ಸಚಿವ ಸ್ಥಾನ ನಿರಾಕರಿಸಿದ್ದರು ಎಂದು ಯಡಿಯೂರಪ್ಪ ಅವರ ಬದ್ಧತೆಯನ್ನು ಹೊಗಳಿದರು.&lt;/p&gt;&lt;p&gt;ಯಡಿಯೂರಪ್ಪ ಅವರ ಆರೋಗ್ಯ ಚೆನ್ನಾಗಿದೆ. ಅವರು ಶತಾಯುಷಿಯಾಗಿ ಬಾಳಬೇಕು. ದೀರ್ಘಕಾಲ ಬಿಜೆಪಿಗೆ ಮಾರ್ಗದರ್ಶನ ಮಾಡಬೇಕು. ಯಡಿಯೂರಪ್ಪ ರಾಜಕೀಯ ಜೀವನ ಯುವ ಕಾರ್ಯಕರ್ತರು ಹಾಗೂ ತಮಗೆಲ್ಲರಿಗೂ ಮಾದರಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಇವತ್ತು ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಇದೇ ದಿನ ಚಿತ್ರದುರ್ಗದಲ್ಲಿ ಬಿ.ಎಸ್&zwnj;.ಯಡಿಯೂರಪ್ಪ ಅವರ ರಾಜಕೀಯ ಬದುಕಿಗೆ 50 ವರ್ಷ ತುಂಬಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಬಹಳ ಸಂತೋಷ ತಂದಿದೆ ಎಂದು ಅಮಿತ್&zwnj; ಶಾ ಹೇಳಿದರು.&lt;/p&gt;&lt;p&gt;ಚಿತ್ರದುರ್ಗವು ರಾಜ ಮದಕರಿ ನಾಯಕರ ನಾಡು. ಹೈದರಾಲಿಯನ್ನು ಸೋಲಿಸಿದ ಓಡಿಸಿದ ವೀರರ ನಾಡು. ಈ ನಾಡಿನ ಹೆಣ್ಣು ಮಗಳು ಒನಕೆ ಓಬವ್ವ ಅವರ ಹೋರಾಟ ಎಲ್ಲರಿಗೂ ಪ್ರೇರಣೆ ಮತ್ತು ಸ್ಫೂರ್ತಿ ಎಂದು ಸ್ಮರಿಸಿದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/bsy-abhimanotsav-grand-event-yadiyurappa-only-one-for-the-south-praises-amit-shah-rav/articleshow-gp2fv4x"/>
        </item>
        <item>
            <title><![CDATA[ಸಚಿವ ಡಿ ಸುಧಾಕರ್ ಸಾವಿಗೆ ಬಿಗ್ ಟ್ವಿಸ್ಟ್, ಅನಾರೋಗ್ಯವಾ? ನಿಗೂಢ ಶಕ್ತಿಗಳ ಆಟವಾ? ನಿವಾಸದ ಬಳಿ ಪತ್ತೆಯಾಗಿದ್ದೇನು?]]></title>
            <link>https://kannada.asianetnews.com/state/witchcraft-objects-found-near-minister-d-sudhakar-s-house-after-his-demise-shocking-video-goes-viral/articleshow-gvtsz0k</link>
            <guid isPermaLink="true">https://kannada.asianetnews.com/state/witchcraft-objects-found-near-minister-d-sudhakar-s-house-after-his-demise-shocking-video-goes-viral/articleshow-gvtsz0k</guid>
            <pubDate>Wed, 13 May 2026 09:53:34 +0530</pubDate>
            <description><![CDATA[ಮಾಜಿ ಸಚಿವ ಸುಧಾಕರ್ ಅವರು ಅನಾರೋಗ್ಯದಿಂದ ನಿಧನರಾದರು. ಆದರೆ, ಅವರ ನಿವಾಸದ ಬಳಿ ತಾಮ್ರದ ಪತ್ರ, ನಿಂಬೆಹಣ್ಣುಗಳಂತಹ ವಾಮಾಚಾರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಇದು ಅವರ ಸಾವಿನ ಕುರಿತು ವಾಮಾಚಾರದ ಶಂಕೆಗಳನ್ನು ಹುಟ್ಟುಹಾಕಿದೆ ಮತ್ತು ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krfrvghf8eypym4152nbxejg,imgname-----------------------2026-05-13t092456.194-1778645844527.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮೇ.13): &lt;/strong&gt;ಚಳ್ಳಕೆರೆ ಹಾಗೂ ಹಿರಿಯೂರಿನಲ್ಲಿ ಶಾಸಕರಾಗಿ ಎರಡು ಬಾರಿ ಮಂತ್ರಿಗಳಾಗಿದ್ದ ಸಚಿವ ಸುಧಾಕರ್ ಅನಾರೋಗ್ಯದಿಂದ ಅಕಾಲಿಕ ಮರಣದಿಂದ ಪಂಚಭೂತಗಳಲ್ಲಿ ಲೀನವಾದರು.&lt;/p&gt;&lt;p&gt;ಸುಧಾಕರ್ ಬದುಕಿನ ಅಂತಿಮ ವಿದಾಯಕ್ಕೆ ಸರ್ಕಾರದ ಬಹುತೇಕ ಸಚಿವರು ಸೇರಿದಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಇಕ್ಕಟ್ಟಾದ ಪ್ರದೇಶದಲ್ಲಿರುವ ಜೈನ ರುದ್ರಭೂಮಿಯ ಅಂಗಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಈ ನಡುವೆ ಅವರ ಸಾವು, ಅನಾರೋಗ್ಯದ ಕುರಿತು ಚರ್ಚೆಗಳು ನಡೆದಿದೆ.&lt;/p&gt;&lt;h2&gt;ಸಚಿವರ ಸಾವಿನ ಹಿಂದೆ ವಾಮಾಚಾರ?&lt;/h2&gt;&lt;p&gt;ಚಳ್ಳಕೆರೆ ಪಟ್ಟಣದ ಸಚಿವರ ನಿವಾಸದ ಸಮೀಪ, ಬೋರ್&zwnj;ವೆಲ್ ಬಳಿ ಕೆಲವು ವಿಚಿತ್ರ ವಸ್ತುಗಳು ಪತ್ತೆಯಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.&lt;/p&gt;&lt;p&gt;ತಾಮ್ರದ ಪತ್ರ, ನಿಂಬೆಹಣ್ಣು, ಮಾಂಸದ ತುಂಡು ಸೇರಿದಂತೆ ಕೆಲವು ವಾಮಾಚಾರಕ್ಕೆ ಬಳಸಲಾಗುವ ವಸ್ತುಗಳು ಕಂಡುಬಂದಿರುವ ವಿಡಿಯೋ ವೈರಲ್ ಆಗಿದೆ.&lt;/p&gt;&lt;h3&gt;ವಾಮಾಚಾರದ ವಸ್ತುಗಳ ಮೊದಲು ನೋಡಿದ್ದು ಯಾರು?&lt;/h3&gt;&lt;p&gt;ಈ ವಸ್ತುಗಳನ್ನು ಮೊದಲಿಗೆ ಮನೆ ಕೆಲಸಗಾರ ಚಂದ್ರು ಗಮನಿಸಿದ್ದಾನೆ ಎಂದು ಹೇಳಲಾಗುತ್ತಿದೆ.ಅವನು ಅವುಗಳನ್ನು ಹೊರತೆಗೆದು ಜನರಿಗೆ ತೋರಿಸಿದ ವಿಡಿಯೋ ಈಗ ಹಿರಿಯೂರು ಹಾಗೂ ಚಳ್ಳಕೆರೆ ಭಾಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 'ಇದು ಸಾಮಾನ್ಯ ಪೂಜೆ ಅಲ್ಲ&hellip; ಯಾರೋ ಉದ್ದೇಶಪೂರ್ವಕವಾಗಿ ವಾಮಾಚಾರ ಮಾಡಿದ್ದಾರೆ' ಎಂದು ಕೆಲವರು ಹೇಳುತ್ತಿದ್ದರೆ, 'ಇದು ಕೇವಲ ಮೂಢನಂಬಿಕೆ&hellip; ಸಾವಿಗೆ ಇದನ್ನು ಜೋಡಿಸುವುದು ಸರಿಯಲ್ಲ'ಎಂದು ಇನ್ನೂ ಕೆಲವರು ಪ್ರತಿಕ್ರಿಯಿಸುತ್ತಿದ್ದಾರೆ.&lt;/p&gt;&lt;p&gt;ಗ್ರಾಮೀಣ ಭಾಗಗಳಲ್ಲಿ ತಮಗಾಗದ ಶತ್ರುಗಳ ವಿರುದ್ಧ ಸೇಡು ತೀರಿಸಲು ನಿಂಬೆಹಣ್ಣು, ತಾಮ್ರದ ಪತ್ರ, ರಕ್ತ ಅಥವಾ ಮಾಂಸದ ತುಂಡುಗಳನ್ನು ಬಳಸಿಕೊಂಡು ನಿಗೂಢ ಶಕ್ತಿಗಳ ಆರಾಧನೆ ನಡೆಸುತ್ತಾರೆ. ಇದೀಗ ಪತ್ತೆಯಾಗಿರುವ ವಸ್ತುಗಳನ್ನ ನೋಡಿದರೆ ಮೃತ ಸುಧಾಕರ್ ವಿರುದ್ಧವೂ ವಾಮಾಚಾರ ನಡೆದಿತ್ತಾ ಎಂಬ ಅನುಮಾನ ಮೂಡಿಸಿದೆ. ಆದರೆ ವೈದ್ಯಕೀಯವಾಗಿ ನೋಡಿದರೆ, ಸಚಿವ ಸುಧಾಕರ್ ಅವರು ಅನಾರೋಗ್ಯದಿಂದಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಈಗಾಗಲೇ ಹೊರಬಂದಿದೆ. ಆದರೂ ಮನೆ ಬಳಿ ಪತ್ತೆಯಾದ ವಸ್ತುಗಳು ಜನರಲ್ಲಿ ಕುತೂಹಲ, ಭಯ ಮತ್ತು ಸಂಶಯ ಮೂಡಿಸಿರುವುದು ಸತ್ಯ.&lt;/p&gt;&lt;p&gt;ಸದ್ಯ ವಾಮಾಚಾರದ ವಿಡಿಯೋ ವೈರಲ್ ಆಗಿದ್ದು, ಚಿತ್ರದುರ್ಗ ಜಿಲ್ಲೆಯ ರಾಜಕೀಯ ವಲಯದಲ್ಲೂ ಚರ್ಚೆ ಜೋರಾಗಿದೆ. ನಿಜವಾಗಿಯೂ ವಾಮಾಚಾರ ನಡೆದಿತ್ತಾ..? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.&lt;/p&gt;]]></content:encoded>
            <category>chitradurga</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/witchcraft-objects-found-near-minister-d-sudhakar-s-house-after-his-demise-shocking-video-goes-viral/articleshow-gvtsz0k"/>
        </item>
        <item>
            <title><![CDATA[BSY ಅಭಿಮಾನೋತ್ಸವಕ್ಕೆ 112 ಅಡಿ ಉದ್ದ, 40 ಅಡಿ ಅಗಲದ ವೇದಿಕೆ! ಚಿತ್ರದುರ್ಗದಲ್ಲಿ ನಡೆಯುತ್ತಿರೋದೇನು?]]></title>
            <link>https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409</link>
            <guid isPermaLink="true">https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409</guid>
            <pubDate>Sat, 09 May 2026 11:58:04 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ 50 ವರ್ಷದ ರಾಜಕೀಯ ಬದುಕಿನ ನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ಅಭಿಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಜನರಿಗೆ ಆಸನದ ವ್ಯವಸ್ಥೆ, ಬೃಹತ್ ವೇದಿಕೆ, ಸಾವಿರಾರು ಜನರಿಂದ ಅಡುಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5pf9xtrvcyj3barwm6sjfp,imgname-----------------------2026-05-09t115256.572-1778307803066.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಮೇಶ್ ಬಿದರಕೆರೆ&lt;/strong&gt;&lt;/p&gt;&lt;p&gt;&lt;strong&gt;ಚಿತ್ರದುರ್ಗ :&lt;/strong&gt; ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಹಿಂಭಾಗದಲ್ಲಿ ಸುಮಾರು 60 ಎಕರೆಗೂ ಹೆಚ್ಚು ಜಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪನವರ 50 ವರ್ಷದ ರಾಜಕೀಯ ಬದುಕಿನ ನೆನಪಿಗಾಗಿ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿರು ಬಿಸಿಲಿನ ನಡುವೆಯೂ ಭರದ ಸಿದ್ಧತೆಗಳು ಪೂರ್ಣಗೊಂಡಿದ್ದು ಕ್ಷಣಗಣನೆ ಆರಂಭವಾಗಿದೆ.&lt;/p&gt;&lt;h2&gt;112 ಅಡಿ ಉದ್ದ ಹಾಗೂ 40 ಅಡಿ ಅಗಲದ ಬೃಹತ್ ವೇದಿಕೆ&lt;/h2&gt;&lt;p&gt;ನಾಡಿನ ವಿವಿಧ ಮಠಗಳ ಸ್ವಾಮೀಜಿಗಳಿಗೆ, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸಭಾಂಗಣ ವ್ಯವಸ್ಥೆ ಮಾಡಲಾಗಿದೆ. ಅಭಿಮಾನೋತ್ಸವ ಕಾರ್ಯಕ್ರಮಕ್ಕೆ 112 ಅಡಿ ಉದ್ದ ಹಾಗೂ 40 ಅಡಿ ಅಗಲ, ಹತ್ತು ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 150ಕ್ಕೂ ಹೆಚ್ಚು ಕಾರ್ಮಿಕರ ಶ್ರಮದಿಂದ ಸುಂದರ ಹಾಗೂ ವಿಶಾಲವಾದ ವೇದಿಕೆ ತಯಾರಾಗಿದೆ. ಸುಮಾರು ಮೂವತ್ತಕ್ಕೂ ಹೆಚ್ಚು ಎಲ್&zwnj;ಇಡಿ ವಾಲ್&zwnj;ಗಳನ್ನು ಅಳವಡಿಸಿದ್ದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಕಾರ್ಯಕ್ರಮ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ.&lt;/p&gt;&lt;p&gt;ಬೃಹತ್ ವೇದಿಕೆಯಲ್ಲಿ ಅತಿಥಿಗಳಿಗೆ ಮೊದಲ ಸಾಲಿನಲ್ಲಿ 25 ಮತ್ತು ಅವುಗಳ ಹಿಂಭಾಗ 25 ಆಸನಗಳನ್ನು ಹಾಕಲಾಗಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಬೆಂಗಳೂರು, ಚಿತ್ರದುರ್ಗ, ಮೈಸೂರು ಕಡೆಯ ಐದು ಕೌoಟರ್ ಗಳಲ್ಲಿ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ. ಒಂದೊಂದು ಕೌoಟರ್&zwnj;ನಲ್ಲಿ ಅಡುಗೆ ಭಟ್ಟರು ಜತೆಗೆ ಸಹಾಯಕರು ಸೇರಿ ಸುಮಾರು 250ಕ್ಕೂ ಅಧಿಕ ಮಂದಿ ಅಡುಗೆ ತಯಾರಿಕೆಯಲ್ಲಿ ನಿರತರಾಗಿದ್ದಾರೆ.&lt;/p&gt;&lt;h3&gt;ಸಾವಿರಾರು ಜನರು ಅಡುಗೆ ತಯಾರಿಕೆಗೆ&lt;/h3&gt;&lt;p&gt;ಐದು ಕೌoಟರ್ ಸೇರಿ ಸಾವಿರಾರು ಜನರು ಅಡುಗೆ ತಯಾರಿಕೆಗೆ ಕೆಲಸ ಮಾಡುತ್ತಿದ್ದಾರೆ.ಯಲಹಂಕ ಶಾಸಕ ವಿಶ್ವನಾಥ್, ಊಟದ ಉಸ್ತುವಾರಿ ವಹಿಸಿದ್ದು ಬರುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಚಿತ್ರದುರ್ಗದ ಸುತ್ತಮುತ್ತಲಿನ ಹಳ್ಳಿಗಳ ನೂರಾರು ಯುವಕರನ್ನು ಕೆಲಸಕ್ಕೆ ಪಡೆದು ಅಡುಗೆ, ಶಾಮಿಯಾನ, ಕುರ್ಚಿಗಳನ್ನು ಹಾಕಲಾಗುತ್ತಿದೆ.ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಮೊಸರನ್ನ, ಪಲಾವ್ ಹಾಗೂ ಮೈಸೂರು ಪಾಕ್&zwnj; ಊಟ ಕೊಡುವ ತಯಾರಿ ನಡೆದಿದ್ದು ರಾಶಿ ರಾಶಿ ತರಕಾರಿ ಗುಡ್ಡೆಗಳೇ ಕಂಡು ಬಂದವು.&lt;/p&gt;&lt;p&gt;ಕಾರ್ಯಕ್ರಮದ ಬಂದೋಬಸ್ತ್&zwnj;ಗಾಗಿ ಸುಮಾರು 2500 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದ್ದು ವ್ಯವಸ್ಥಿತ ಕಾರ್ಯಕ್ರಮ ಜರುಗಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೇದಿಕೆಯ ಬಳಿಯ ಮುಖ್ಯ ರಸ್ತೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಾಗತಕ್ಕೆ ಅದ್ದೂರಿ ತಯಾರಿ ನಡೆಸಲಾಗಿದೆ. ಕಾರ್ಯಕ್ರಮದ ಸ್ಥಳ ತಲುಪುವ ಮುಖ್ಯ ರಸ್ತೆಗಳಲ್ಲಿ ಸಾಲು ಸಾಲು ಫ್ಲೆಕ್ಸ್, ಕಟೌಟ್&zwnj;ಗಳನ್ನು ನಿಲ್ಲಿಸಲಾಗಿದೆ.&lt;/p&gt;&lt;p&gt;ಬಿರು ಬೇಸಗೆ ಧಗೆ ಹಿನ್ನೆಲೆ ಸುಮಾರು 30 ಕ್ಕೂ ಹೆಚ್ಚು ಹೆಲಿಕಾಪ್ಟರ್ ಫ್ಯಾನ್&zwnj;ಗಳನ್ನು ಅಳವಡಿಸಲಾಗಿದ್ದು ಒಂದೊಂದು ಫ್ಯಾನ್ ಸಹ ಸುಮಾರು 1500 ಇಂದ 2000 ಜನರಿಗೆ ಗಾಳಿ ಒದಗಿಸಲಿವೆ ಎನ್ನಲಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bsy-abhimanotsava-a-grand-stage-measuring-112-feet-long-and-40-feet-wide-rav/articleshow-hc6r409"/>
        </item>
        <item>
            <title><![CDATA[ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2028ಕ್ಕೆ ಪೂರ್ಣ: ರೈಲ್ವೆ ರಾಜ್ಯ ಸಚಿವ ಸೋಮಣ್ಣ]]></title>
            <link>https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</link>
            <guid isPermaLink="true">https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</guid>
            <pubDate>Wed, 10 Jun 2026 13:32:50 +0530</pubDate>
            <description><![CDATA[ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರು ಮತ್ತು ತುಮಕೂರು ಭಾಗದ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಭೆಯಲ್ಲಿ, ಬಹುನಿರೀಕ್ಷಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗವನ್ನು 2028ರೊಳಗೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಘೋಷಿಸಿದರು. ಜೊತೆಗೆ, ತುಮಕೂರು-ರಾಯದುರ್ಗ ಯೋಜನೆ ಮತ್ತು 32 ಆರ್&zwnj;ಒಬಿ/ಆರ್&zwnj;ಯುಬಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01ktr8pzmb8s9xfx9jv0bed22g,imgname-v-somanna--1--1781078392458.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಬೆಂಗಳೂರು ಮತ್ತು ತುಮಕೂರು ಭಾಗಗಳಲ್ಲಿ ನಡೆಯುತ್ತಿರುವ ಹಾಗೂ ಪ್ರಸ್ತಾವಿತ ರೈಲ್ವೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಮೀಕ್ಷಾ ಸಭೆ ನಡೆಸಿದರು. ಈ ಪರಿಶೀಲನೆಯಲ್ಲಿ ರಸ್ತೆ ಮೇಲ್ಸೇತುವೆಗಳು (ROB), ರಸ್ತೆ ಕೆಳಸೇತುವೆಗಳು (RUB) ಮತ್ತು ಪಾದಚಾರಿ ಮೇಲ್ಸೇತುವೆಗಳು (FOB) ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಒಳಗೊಂಡಿದ್ದವು. ಈ ವೇಳೆ ಕರ್ನಾಟಕ ಬಹುನಿರೀಕ್ಷಿತ ಹೊಸ ರೈಲು ಯೋಜನೆಯಾದ ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು ಮಾರ್ಗವು 2028ರಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.&lt;/p&gt;&lt;h2&gt;ಸಚಿವರ ಸ್ವಕ್ಷೇತ್ರ ತುಮಕೂರಿನಲ್ಲಿ 32 ಆರ್&zwnj;ಒಬಿ, ಆರ್&zwnj;ಯುಬಿ ಕಾಮಗಾರಿ: 2026-27ರ ಗಡುವು&lt;/h2&gt;&lt;p&gt;ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 32 ROB ಮತ್ತು RUB ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪಂಡಿತನಹಳ್ಳಿ, ಮೈದಾಳ, ಬಡ್ಡಿಹಳ್ಳಿ, ಬಟವಾಡಿ, ಹೆಗ್ಗೆರೆ, ಮಲ್ಲಸಂದ್ರ, ಬೆಂಚೆಗೆರೆ, ನಿಟ್ಟೂರು-ಮೈಸೂರು ಮಾರ್ಗ, ನಂದಿಹಳ್ಳಿ ಗೇಟ್ ಹಾಗೂ ಹಾಸನ ಮತ್ತು ಬಿದಿರೆಗುಡಿ ಕಡೆಗೆ ಬಿಎಚ್ ರಸ್ತೆಯಲ್ಲಿನ ಸೇತುವೆಗಳು ಪ್ರಮುಖವಾಗಿವೆ. ಈ ಎಲ್ಲಾ ಕಾಮಗಾರಿಗಳನ್ನು 2026&ndash;27ರೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.&lt;/p&gt;&lt;h2&gt;ರೂ. 1,801 ಕೋಟಿ ವೆಚ್ಚದ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ&lt;/h2&gt;&lt;p&gt;ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಇಲಾಖೆಯ ನಡುವೆ 50:50 ವೆಚ್ಚ ಹಂಚಿಕೆ ಮಾದರಿಯಡಿಯಲ್ಲಿ ಒಟ್ಟು 1,801 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿಗೊಳ್ಳುತ್ತಿರುವ 191 ಕಿ.ಮೀ. ಉದ್ದದ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯನ್ನು ಸಚಿವರು ಸೂಕ್ಷ್ಮವಾಗಿ ಪರಿಶೀಲಿಸಿದರು. ಈ ಯೋಜನೆಯು ಮಧ್ಯ ಕರ್ನಾಟಕದ ಕನೆಕ್ಟಿವಿಟಿಗೆ ಹೊಸ ಕ್ರಾಂತಿಯನ್ನೇ ತರಲಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿನ ಶೇ.92ಕ್ಕಿಂತ ಹೆಚ್ಚು ಭಾಗವನ್ನು ಈಗಾಗಲೇ ಸ್ವಾಧೀನಪಡಿಸಿಕೊಂಡಿರುವುದಾಗಿ ಸಚಿವರು ತಿಳಿಸಿದರು. ಉರುಕೆರೆ&ndash;ತಿಮ್ಮರಾಜನಹಳ್ಳಿ (13.31 ಕಿ.ಮೀ.) ವಿಭಾಗ ಪೂರ್ಣಗೊಂಡಿದ್ದು, ಕಾರ್ಯಾಚರಣೆಗೆ ಸಿದ್ಧವಾಗಿದೆ. ಸಂಪೂರ್ಣ ಯೋಜನೆಯನ್ನು ಫೆಬ್ರವರಿ 2028ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;&lt;h2&gt;&amp;nbsp;ರೂ. 2,496 ಕೋಟಿ ವೆಚ್ಚದ ತುಮಕೂರು-ರಾಯದುರ್ಗ ಅಂತರರಾಜ್ಯ ಯೋಜನೆ&amp;nbsp;&lt;/h2&gt;&lt;p&gt;ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನು ಬೆಸೆಯುವ ಅತ್ಯಂತ ಮಹತ್ವಾಕಾಂಕ್ಷೆಯ 206 ಕಿ.ಮೀ. ಉದ್ದದ ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿಯನ್ನು ಸಭೆಯಲ್ಲಿ ಮುನ್ನೆಲೆಗೆ ತರಲಾಯಿತು. ಈ ಬೃಹತ್ ಯೋಜನೆಗೆ ಒಟ್ಟು 2,496 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ.&lt;/p&gt;&lt;p&gt;ಈ ಯೋಜನೆಯ ಒಟ್ಟು ಉದ್ದದ ಪೈಕಿ ಈಗಾಗಲೇ 83 ಕಿ.ಮೀ. ರೈಲು ಮಾರ್ಗ ಯಶಸ್ವಿಯಾಗಿ ಕಾರ್ಯಾರಂಭ ಮಾಡಿದೆ. ಪ್ರಸ್ತುತ ಪ್ರಗತಿಯಲ್ಲಿರುವ ತುಮಕೂರು-ಉರುಕೆರೆ ವಿಭಾಗವು ಶಾಸನಬದ್ಧ ಸುರಕ್ಷತಾ ತಪಾಸಣೆಯಲ್ಲಿ (Statutory Safety Inspection) ಉತ್ತೀರ್ಣಗೊಂಡಿದ್ದು, ಪಾವಗಡ-ದೊಡ್ಡಹಳ್ಳಿ ವಿಭಾಗವು ಉದ್ಘಾಟನೆಗೆ ಸಂಪೂರ್ಣ ಸಜ್ಜಾಗಿದೆ. ಇನ್ನುಳಿದ ಮಾರ್ಗಗಳ ಕಾಮಗಾರಿಗಳು ಅತ್ಯಂತ ವೇಗವಾಗಿ ಪ್ರಗತಿಯಲ್ಲಿದ್ದು, ಶೇ. 97 ಕ್ಕೂ ಹೆಚ್ಚು ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯದ ಹಂತ ತಲುಪಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.&lt;/p&gt;&lt;p&gt;ಉಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗೊಳಿಸಲು, ರಸ್ತೆ ಮುಚ್ಚುವಿಕೆ ಮತ್ತು ತಿರುವುಗಳಿಗೆ ಸಮಯೋಚಿತ ಅನುಮೋದನೆ ಪಡೆಯಲು ಹಾಗೂ ವಿದ್ಯುತ್ ಮಾರ್ಗಗಳು, ನೀರಿನ ಪೈಪ್&zwnj;ಲೈನ್&zwnj;ಗಳು ಮತ್ತು ಅರಣ್ಯ ಅನುಮತಿಗಳಂತಹ ಉಪಯುಕ್ತತೆ ಸ್ಥಳಾಂತರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಅತ್ಯವಶ್ಯಕ ಎಂದು ಸೋಮಣ್ಣ ಒತ್ತಿ ಹೇಳಿದರು. ಈ ಸಭೆಯಲ್ಲಿ ನೈಋತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3"/>
        </item>
        <item>
            <title><![CDATA[ಹುಬ್ಬಳ್ಳಿ-ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ, 5 ಜಿಲ್ಲೆಯ ಪ್ರವಾಸಿಗರಿಗೆ ಇದೊಂದು ಆಫರ್!]]></title>
            <link>https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</link>
            <guid isPermaLink="true">https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</guid>
            <pubDate>Wed, 17 Jun 2026 12:01:04 +0530</pubDate>
            <description><![CDATA[ನೈಋತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 20 ಮತ್ತು 21 ರಂದು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಪ್ರವಾಸಿಗರಿಗೆ ಅನುಕೂಲಕರವಾದ ವೇಳಾಪಟ್ಟಿಯನ್ನು ಹೊಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khp601b9hctbmkhxep8fe8wz,imgname-indian-railway--2--1771344758121.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಹುಬ್ಬಳ್ಳಿ ಮತ್ತು ಪ್ರವಾಸಿ ತಾಣಗಳಿರುವ ಚಿಕ್ಕಮಗಳೂರು ನಡುವೆ ಪ್ರಯಾಣಿಸುವ ಜನರಿಗೆ ನೈಋತ್ಯ ರೈಲ್ವೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಹಾಗೂ ರೈಲುಗಳಲ್ಲಿನ ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಜೂನ್ 20 ಮತ್ತು 21 ರಂದು ಈ ಎರಡೂ ನಗರಗಳ ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ರೈಲು ಉತ್ತರ ಮತ್ತು ಮಧ್ಯ ಕರ್ನಾಟಕದ ಒಟ್ಟು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಮಾನ್ಸೂನ್ ಪ್ರಕೃತಿ ಸವಿಯಲು ಇದೊಂದು ಆಫರ್ ನೀಡಿದಂತಿದೆ. ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾದ ಈ ರೈಲಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.&lt;/p&gt;&lt;h2&gt;ರೈಲಿನ ವೇಳಾಪಟ್ಟಿ ಮತ್ತು ಸಂಚಾರದ ವಿವರ&lt;/h2&gt;&lt;p&gt;ಈ ವಿಶೇಷ ರೈಲನ್ನು ಜೂನ್ 20 (ಶನಿವಾರ) ಮತ್ತು ಜೂನ್ 21 (ಭಾನುವಾರ) ರಂದು ಒಟ್ಟು ಎರಡು ಟ್ರಿಪ್&zwnj;ಗಳ ಕಾಲ ಓಡಿಸಲಾಗುತ್ತಿದೆ.&lt;/p&gt;&lt;p&gt;ಹುಬ್ಬಳ್ಳಿ - ಚಿಕ್ಕಮಗಳೂರು ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07341): ಜೂನ್ 20 ಮತ್ತು 21 ರಂದು ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಕ್ಕೆ ಚಿಕ್ಕಮಗಳೂರು ನಿಲ್ದಾಣವನ್ನು ತಲುಪಲಿದೆ.&lt;/p&gt;&lt;p&gt;ಚಿಕ್ಕಮಗಳೂರು - ಹುಬ್ಬಳ್ಳಿ ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07342): ಜೂನ್ 20 ಮತ್ತು 21 ರಂದು ಚಿಕ್ಕಮಗಳೂರಿನಿಂದ ಸಂಜೆ 5:30 ಕ್ಕೆ ಹೊರಟು, ಅದೇ ದಿನ ರಾತ್ರಿ 11:20 ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ತಲುಪಲಿದೆ.&lt;/p&gt;&lt;h2&gt;ಎಲ್ಲೆಲ್ಲಿ ನಿಲುಗಡೆ ಇರಲಿದೆ? (ಮಾರ್ಗ ಮತ್ತು ನಿಲ್ದಾಣಗಳು)&lt;/h2&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಮಾರ್ಗಮಧ್ಯೆ ಪ್ರಮುಖ ನಗರಗಳು ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.&lt;/p&gt;&lt;p&gt;ಪ್ರಮುಖ ನಿಲುಗಡೆಗಳು: ಕುಂದಗೋಳ, ಸಂಶಿ (ಸೌಂಶಿ), ಯಳವಿಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು(ಚಿತ್ರದುರ್ಗ), ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ.&lt;/p&gt;&lt;h2&gt;ಬೋಗಿಗಳ ವಿವರ&amp;nbsp;&lt;/h2&gt;&lt;p&gt;ಈ ವಿಶೇಷ ರೈಲು ಒಟ್ಟು 10 ಬೋಗಿಗಳನ್ನು (Coaches) ಒಳಗೊಂಡಿರುತ್ತದೆ. ಸಾಮಾನ್ಯ ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೋಗಿಗಳನ್ನು ವಿನ್ಯಾಸಗೊಳಿಸಲಾಗಿದೆ:&lt;/p&gt;&lt;ul&gt; &lt;li&gt;1 ಸ್ಲೀಪರ್ ಕ್ಲಾಸ್ ಬೋಗಿ (Sleeper Class)&lt;/li&gt; &lt;li&gt;7 ಸಾಮಾನ್ಯ ದರ್ಜೆ ಬೋಗಿಗಳು (General Coach)&lt;/li&gt; &lt;li&gt;2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್ ಹಾಗೂ ದಿವ್ಯಾಂಗರ ವಿಶೇಷ ಕಂಪಾರ್ಟ್&zwnj;ಮೆಂಟ್ ಬೋಗಿಗಳು.&lt;/li&gt;&lt;/ul&gt;&lt;h2&gt;ಪ್ರವಾಸಿಗರಿಗೆ &amp;nbsp;ಸೂಕ್ತ ಸಮಯದ ಪ್ಲಾನಿಂಗ್!&lt;/h2&gt;&lt;p&gt;ನೈಋತ್ಯ ರೈಲ್ವೆ ಅಧಿಕಾರಿಗಳು ಈ ರೈಲಿನ ವೇಳಾಪಟ್ಟಿಯನ್ನು ಪ್ರವಾಸಿಗರಿಗೆ ಅತ್ಯಂತ ಅನುಕೂಲವಾಗುವ ರೀತಿಯಲ್ಲಿ ಸಿದ್ಧಪಡಿಸಿದ್ದಾರೆ.&lt;/p&gt;&lt;p&gt;ರೈಲು ಬೆಳಗ್ಗೆ 11:15ಕ್ಕೆ ಚಿಕ್ಕಮಗಳೂರು ತಲುಪುವುದರಿಂದ, ಪ್ರವಾಸಿಗರು ಆರಾಮವಾಗಿ &amp;nbsp;ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾಬುಡನ್&zwnj;ಗಿರಿ ಮುಂತಾದ ಕಡೆ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಮಾಡಲು ಸಾಕಷ್ಟು ಸಮಯ ಸಿಗುತ್ತದೆ.&lt;/p&gt;&lt;p&gt;ಇನ್ನು ಹಿಂದಿರುಗುವಾಗ ಭಾನುವಾರ ಸಂಜೆ 5:30ಕ್ಕೆ ರೈಲು ಇರುವುದರಿಂದ, ವೀಕೆಂಡ್&zwnj;ನಲ್ಲಿ ಇಡೀ ದಿನ ಸುತ್ತಾಡಿ, ಯಾವುದೇ ಆತುರವಿಲ್ಲದೇ ಆರಾಮವಾಗಿ ರೈಲು ಹತ್ತಿ ರಾತ್ರಿಯೊಳಗೆ ಹುಬ್ಬಳ್ಳಿಗೆ ತಲುಪಬಹುದಾಗಿದೆ. ಸಾರ್ವಜನಿಕರು ಹಾಗೂ ಪ್ರಕೃತಿ ಪ್ರೇಮಿಗಳು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಕೋರಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm"/>
        </item>
        <item>
            <title><![CDATA[ಸಚಿವ ಡಿ. ಸುಧಾಕರ್ ನಿಧನ: ಹಿರಿಯೂರು ಶಾಸಕ, ಜನಪರ ನಾಯಕನ ರಾಜಕೀಯ ಜೀವನಕ್ಕೆ ಸ್ಪೂರ್ತಿಯೇ ಚಿಕ್ಕಪ್ಪ!]]></title>
            <link>https://kannada.asianetnews.com/politics/senior-karnataka-minister-d-sudhakar-passes-away-early-life-and-education-and-political-journey-gdp/articleshow-sgq8526</link>
            <guid isPermaLink="true">https://kannada.asianetnews.com/politics/senior-karnataka-minister-d-sudhakar-passes-away-early-life-and-education-and-political-journey-gdp/articleshow-sgq8526</guid>
            <pubDate>Sun, 10 May 2026 09:14:54 +0530</pubDate>
            <description><![CDATA[ಕರ್ನಾಟಕದ ಸಾಂಖ್ಯಿಕ ಮತ್ತು ಯೋಜನಾ ಸಚಿವ ಡಿ. ಸುಧಾಕರ್ ಅವರು ಅನಾರೋಗ್ಯದಿಂದಾಗಿ ತಮ್ಮ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಿರಿಯೂರು ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 'ಬಡವರ ಬಂಧು' ಎಂದೇ ಜನಪ್ರಿಯರಾಗಿದ್ದರು ಮತ್ತು ಸಹಕಾರ ಕ್ಷೇತ್ರದಲ್ಲೂ ಅಪಾರ ಸೇವೆ ಸಲ್ಲಿಸಿದ್ದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr7zhpd5fvvjm2nq8g0nyp49,imgname-mla-d-sudhakar-1778384427429.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಕರ್ನಾಟಕ ರಾಜ್ಯದ ಸಾಂಖ್ಯಿಕ ಮತ್ತು ಯೋಜನಾ ಸಚಿವರಾಗಿದ್ದ ಡಿ. ಸುಧಾಕರ್ ಅವರು ಭಾನುವಾರ ಬೆಳಗಿನ ಜಾವ 3.15 ಗಂಟೆಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ತೀವ್ರ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.&lt;/p&gt;&lt;p&gt;ಡಿ. ಸುಧಾಕರ್ ಅವರ ನಿಧನದಿಂದ ರಾಜ್ಯ ರಾಜಕೀಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದ ಅವರು ಬಡವರ ಪರ ಕಾಳಜಿ ವಹಿಸಿದ ರಾಜಕಾರಣಿಯಾಗಿ ಹೆಸರುವಾಸಿಯಾಗಿದ್ದರು. ಹಿರಿಯೂರು ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.&lt;/p&gt;&lt;h2&gt;ರಾಜಕೀಯಕ್ಕೆ ಚಿಕ್ಕಪ್ಪನೇ ಪ್ರೇರಣೆ&lt;/h2&gt;&lt;p&gt;1961ರ ಮಾರ್ಚ್ 28ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಜನಿಸಿದ ಸುಧಾಕರ್ ಅವರು ತಮ್ಮ ಪ್ರಾಥಮಿಕ ಹಾಗೂ ಪೂರ್ವ ವಿಶ್ವವಿದ್ಯಾಲಯ ಶಿಕ್ಷಣವನ್ನು ಚಿತ್ರದುರ್ಗದಲ್ಲೇ ಪೂರ್ಣಗೊಳಿಸಿದರು. ನಂತರ ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆದರು. ಪದವಿ ಶಿಕ್ಷಣದ ನಂತರ ಅವರು ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ಕಟ್ಟಿಕೊಂಡರು. ಅವರ ರಾಜಕೀಯ ಪ್ರವೇಶಕ್ಕೆ ಕುಟುಂಬ ಹಿನ್ನೆಲೆ ಪ್ರಮುಖ ಕಾರಣವಾಗಿತ್ತು. ಅವರ ಚಿಕ್ಕಪ್ಪ ಎನ್. ಜಯಣ್ಣ ಅವರು ಚಳ್ಳಕೆರೆ ಕ್ಷೇತ್ರದ ಶಾಸಕರಾಗಿದ್ದು, ಅವರ ಮಾರ್ಗದರ್ಶನದಲ್ಲಿ ಸುಧಾಕರ್ ಅವರು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರು. ಚಿಕ್ಕಪ್ಪನ ರಾಜಕೀಯ ಉಸ್ತುವಾರಿಯನ್ನು ಡಿ.ಸುಧಾಕರ್ ವಹಿಸಿಕೊಂಡಿದ್ದರು.&lt;/p&gt;&lt;h2&gt;ರಾಜಕೀಯ ಜೀವನದ ಬೆಳವಣಿಗೆ&lt;/h2&gt;&lt;p&gt;ಡಿ. ಸುಧಾಕರ್ ಅವರು 2004ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚಳ್ಳಕೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಬಳಿಕ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾಗುತ್ತಿದ್ದಂತೆ ಅವರು ಸಾಮಾನ್ಯ ಕ್ಷೇತ್ರವಾದ ಹಿರಿಯೂರು ಕಡೆಗೆ ತನ್ನ ರಾಜಕೀಯ ಸ್ಥಾನವನ್ನು ಬದಲಿಸಿದರು. 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರ ಬಿಎಸ್&zwnj;. ಯಡಿಯೂರಪ್ಪ ಅವರ ಸರ್ಕಾರಕ್ಕೆ ಬೆಂಬಲ ನೀಡಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದರು.&lt;/p&gt;&lt;p&gt;2013ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾದ ಅವರು, 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡರು. ಆದರೆ 2023ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಾಂಖ್ಯಿಕ ಮತ್ತು ಯೋಜನಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡರು.&lt;/p&gt;&lt;h2&gt;ಸಹಕಾರ ಕ್ಷೇತ್ರದಲ್ಲಿ ಸಾಧನೆ&lt;/h2&gt;&lt;p&gt;ರಾಜಕೀಯದ ಜೊತೆಗೆ ಸಹಕಾರ ಕ್ಷೇತ್ರದಲ್ಲೂ ಅವರು ಮಹತ್ವದ ಪಾತ್ರ ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಸಹಕಾರ ಸಂಘಗಳ ಮೂಲಕ ಸಾವಿರಾರು ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.&lt;/p&gt;&lt;h2&gt;ಜನಪ್ರಿಯ ನಾಯಕ&lt;/h2&gt;&lt;p&gt;ಚಳ್ಳಕೆರೆ ಹಾಗೂ ಹಿರಿಯೂರು ಕ್ಷೇತ್ರಗಳಲ್ಲಿ ಜೈನ ಸಮುದಾಯದ ಮತದಾರರ ಸಂಖ್ಯೆ ಅತಿ ಕಡಿಮೆ ಇದ್ದರೂ, ಇತರ ಸಮುದಾಯಗಳ ವಿಶ್ವಾಸವನ್ನು ಗಳಿಸುವ ಮೂಲಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಬಡವರ ನೆರವಿಗೆ ಸದಾ ಸಿದ್ಧರಾಗಿದ್ದ ಕಾರಣ ಅವರಿಗೆ &quot;ಬಡವರ ಬಂಧು&quot; ಎಂಬ ಹೆಸರೂ ದೊರಕಿತ್ತು.&lt;/p&gt;&lt;p&gt;ಡಿ. ಸುಧಾಕರ್ ಅವರು ಶ್ರೀಮತಿ ಹರ್ಷಿಣಿ ಅವರೊಂದಿಗೆ ಸುದೀರ್ಘ ದಾಂಪತ್ಯ ಜೀವನ ನಡೆಸಿದ್ದು, ಅವರಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಈಗ ತಮ್ಮ 65ನೇ ವರ್ಷದಲ್ಲಿ ಕುಟುಂಬವನ್ನು ಅಗಲಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/politics/senior-karnataka-minister-d-sudhakar-passes-away-early-life-and-education-and-political-journey-gdp/articleshow-sgq8526"/>
        </item>
        <item>
            <title><![CDATA[₹75 ಲಕ್ಷ ವೆಚ್ಚದಲ್ಲಿ ಈದ್ಗಾ ಮೈದಾನ, ₹4 ಕೋಟಿ ವೆಚ್ಚದಲ್ಲಿ ಏರ್‌ ಕಂಡಿಷನ್ಡ್ ಶಾದಿಮಹಲ್.. ಸರ್ವೇ ಜನಃ ಸುಖಿನೋ ಭವಂತು ಎಂದ ಬಿಜೆಪಿ ಶಾಸಕ]]></title>
            <link>https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</link>
            <guid isPermaLink="true">https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</guid>
            <pubDate>Fri, 29 May 2026 13:05:06 +0530</pubDate>
            <description><![CDATA[ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು 75 ಲಕ್ಷ ರು. ವೆಚ್ಚದ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ʻಸರ್ವೇ ಜನಃ ಸುಖಿನೋ ಭವಂತುʼ ಧ್ಯೇಯದಡಿ ತಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದಾಗಿ ತಿಳಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kssa93cyy29d46k3zw87pha1,imgname-----------------------2026-05-29t125046.468-1780039847325.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳಲ್ಕೆರೆ (ಮೇ.29):&lt;/strong&gt; ಕ್ಷೇತ್ರದಲ್ಲಿ ವಿಭಿನ್ನ ಮನೋಧರ್ಮದ ಜನರು ಇರುವುದು ಸಹಜ. ನನಗೆ ಆಗದವರು ಇದ್ದಾರೆ, ವಿಶ್ವಾಸಿಕರೂ ಇದ್ದಾರೆ. ಆದರೆ ನಾನು ಯಾರನ್ನೂ ಕಡೆಗಣಿಸದೆ ʻಸರ್ವೇ ಜನಃ ಸುಖಿನೋ ಭವಂತುʼ ಎಂಬ ಧ್ಯೇಯವನ್ನಿಟ್ಟುಕೊಂಡು ಕೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.&lt;/p&gt;&lt;p&gt;75 ಲಕ್ಷ ರು. ವೆಚ್ಚದಲ್ಲಿ ಪಟ್ಟಣದ ಹೊರ ವಲಯದಲ್ಲಿರುವ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;h2&gt;ಏರ್&zwnj; ಕಂಡಿಷನ್&zwnj;ವುಳ್ಳ ಶಾದಿ ಮಹಲ್ ನಿರ್ಮಾಣ&lt;/h2&gt;&lt;p&gt;ರಾಜ್ಯ ಸರ್ಕಾರದ ಅನುದಾನದಲ್ಲಿ ಶಾದಿ ಮಹಲ್&zwnj;ಗೆ ಹಣ ನೀಡಲು ಅವಕಾಶವಿಲ್ಲ. ಆದರೂ 4 ಕೋಟಿ ರು. ವೆಚ್ಚದಲ್ಲಿ ಏರ್ ಕಂಡೀಷನ್&zwnj;ವುಳ್ಳ ಶಾದಿ ಮಹಲ್ ಕಟ್ಟಿಸಲಾಗುತ್ತಿದೆ. ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮನವೊಲಿಸಿ ಶಾದಿ ಮಹಲ್&zwnj; ನಿರ್ಮಾಣಕ್ಕೆ ಅನುದಾನ ತಂದಿದ್ದೆ ಎಂದರು.&lt;/p&gt;&lt;p&gt;ಎಲ್ಲಿ ಯಾರಿಗೆ ನ್ಯಾಯ ಕೊಡಬೇಕು, ಅಲ್ಲಾನಿಗೆ ಗೊತ್ತಿದೆ!&lt;/p&gt;&lt;p&gt;ಹುಟ್ಟು-ಸಾವಿನ ನಡುವೆ ಇರುವ ಜೀವನ ಅತ್ಯಂತ ಪವಿತ್ರವಾದುದು. ಮನುಷ್ಯತ್ವವಿರುವ ಎಲ್ಲರೂ ಅವಕಾಶ ಸಿಕ್ಕಾಗ ಹತ್ತಾರು ಜನ ಮೆಚ್ಚುವ ರೀತಿ ಕೆಲಸ ಮಾಡಬೇಕು. ಅದೆ ನಿಜವಾದ ಮಾನವ ಧರ್ಮ. 32 ವರ್ಷಗಳ ಹಿಂದೆ ಭರಮಸಾಗರದಿಂದ ಪ್ರಥಮ ಬಾರಿ ಸ್ಪರ್ಧಿಸಿ ಈಗ ಐದು ಬಾರಿ ಶಾಸಕನಾಗಿದ್ದೇನೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದೇನೆ. ಎಲ್ಲಿ ಯಾರಿಗೆ ನ್ಯಾಯ ಕೊಡಬೇಕೆಂಬುದು ಅಲ್ಲಾನಿಗೆ ಗೊತ್ತಿದೆ. ನನಗೆ ಜಾತಿ ಗೊತ್ತಿಲ್ಲ. ಎಲ್ಲರನ್ನು ಕುಟುಂಬದವರಂತೆ ಕಾಣುತ್ತಿದ್ದೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿಯೂ ಗದ್ದಲ ಗಲಾಟೆಗೆ ಅವಕಾಶ ಕೊಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹಗಲು ರಾತ್ರಿ ಪ್ರಾಮಾಣ ಕವಾಗಿ ಶ್ರಮಿಸುತ್ತಿದ್ದೇನೆಂದು ತಿಳಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರಾದ ಆರ್.ಎ.ಅಶೋಕ್, ಪಿ.ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ಮುಸ್ಲಿಂ ಮುಖಂಡರಾದ ಮುತ್ತುಲಿ ಸಾಬ್, ಅಲಿಂಸಾಬ್, ಸೈಯದ್&zwnj;ಸಾಬ್, ಭಕ್ಷಿಸಾಬ್, ಜಾಕಿರ್ ಇನ್ನಿತರರು ಹಾಜರಿದ್ದರು&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb"/>
        </item>
        <item>
            <title><![CDATA[BSY old Ambassador car: ಬಿಎಸ್‌ವೈ ಅಭಿಮಾನೋತ್ಸವ, ಪ್ರಮುಖ ಆಕರ್ಷಣೆ ಆಗಿರುವ ಅಂಬಾಸಿಡರ್ ಕಾರಿನ ಹಿಂದಿನ ಕಥೆಯೇನು?]]></title>
            <link>https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx</link>
            <guid isPermaLink="true">https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx</guid>
            <pubDate>Sat, 09 May 2026 11:33:22 +0530</pubDate>
            <description><![CDATA[ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ, ಅವರ ರಾಜಕೀಯ ಜೀವನದ ಆರಂಭದಲ್ಲಿ ಬಳಸಿದ CKR 45 ನಂಬರಿನ ಅಂಬಾಸಿಡರ್ ಕಾರು ಪ್ರಮುಖ ಆಕರ್ಷಣೆಯಾಗಿದೆ. ಈ ಕಾರು ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪನವರಷ್ಟೇ ಪ್ರಮುಖ ಪಾತ್ರ ವಹಿಸಿದೆ ಎಂದು ಬಿ.ವೈ. ವಿಜಯೇಂದ್ರ ಸ್ಮರಿಸಿಕೊಂಡರು.]]></description>
            <media:content url="https://static.asianetnews.com/images/w-1280,h-720,format-jpg,imgid-01kr5n7sjmhc8c06y609dmdpt2,imgname-----------------------2026-05-09t113110.990-1778306508372.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮೇ.9): &lt;/strong&gt;ಜಿಲ್ಲೆಯಲ್ಲಿ ಶನಿವಾರ ನಡೆಯಲಿರುವ ಬಿಎಸ್ ವೈ ಅಭಿಮಾನೋತ್ಸವಕ್ಕೆ ಎಲ್ಲರನ್ನೂ, ಎಲ್ಲವನ್ನೂ ಒಳಗೊಳ್ಳುವ ಸೂತ್ರಪಾಲನೆಗೆ ಸಂಘಟಕರು ಮುಂದಾಗಿದ್ದಾರೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜಾರಿಗೊಳಿಸಿದ ಯೋಜನೆಗಳಿಗೆ ಸ್ತಬ್ಧಚಿತ್ರಗಳ ಸ್ವರೂಪ ನೀಡಿದ್ದರೆ ರಾಜಕೀಯ ಆರಂಭದ ದಿನಗಳಲ್ಲಿ ಅವರು ಬಳಸಿದ್ದ ಅಂಬಾಸಿಡರ್ ಕಾರನ್ನು ಕಾರ್ಯಕ್ರಮ ನಡೆಯವ ಪ್ರದೇಶಕ್ಕೆ ತಂದು ಜನರನ್ನು ಆಕರ್ಷಿಸಲಾಗುತ್ತಿದೆ.&lt;/p&gt;&lt;p&gt;ಬಿ.ಎಸ್.ಯಡಿಯೂರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಬಳಸಿದ ಸಿಕೆಆರ್ 45 ನಂಬರಿನ ಹಿಂದೂಸ್ತಾನ್ ಅಂಬಾಸಿಡರ್ ಕಾರಿನ ಬಗ್ಗೆ ಮಾಹಿತಿ ನೀಡಿದ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ.ವಿಜಯೇಂದ್ರ ಈ ಕಾರನ್ನು ರಾಜ್ಯದ ಜನ ಈಗಲೂ ನೆನಪಿನಲ್ಲಿ ಇಟ್ಟುಕೊಡಿದ್ದಾರೆ ಎಂದರು.&lt;/p&gt;&lt;p&gt;ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ರೈತನಾಯಕ ಎಂದು ಜನ ಗುರುತಿಸುತ್ತಾರೆ, ಪ್ರೀತಿಸುತ್ತಾರೆ. ಯಡಿಯೂರಪ್ಪ ಅವರ ಮೇಲೆ ನಾಡಿನ ಜನ ಯಾವ ರೀತಿಯ ಪ್ರೀತಿ ಮತ್ತು ಅಭಿಮಾನ ತೋರುತ್ತಾರೋ ಅದೇ ಸಿಕೆಆರ್ 45 ನಂಬರಿನ ಕಾರಿಗೂ ಜನ ಪ್ರೀತಿ ತೋರುತ್ತಾರೆ. ಆ ಕಾಲದಲ್ಲಿ ಕೇವಲ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿಹಳ್ಳಿಗೆ ತೆಗೆದುಕೊಂಡು ಹೋಗಿ ಪಕ್ಷದ ಸಂಘಟನೆ ಬಲಪಡಿಸಲು ಬಿಎಸ್&zwj;ವೈ ಸಾಕಷ್ಟು ಶ್ರಮಿಸಿದರು. ಪಕ್ಷ ಸಂಘಟನೆಯಲ್ಲಿ ಯಡಿಯೂರಪ್ಪ ಅವರ ಪಾತ್ರ ಎಷ್ಟಿದೆಯೊ ಈ ಕಾರಿನ ಪಾತ್ರವೂ ಅಷ್ಟೇ ಇತ್ತು ಎಂದರು.&lt;/p&gt;&lt;p&gt;ಬಿಎಸ್&zwj;ವೈ ಅವರೊಂದಿಗೆ ಅನಂತ ಕುಮಾರ್, ಡಿ.ಎಚ್.ಶಂಕರಮೂರ್ತಿ ಅವರು ಇದೇ ಕಾರಿನಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಆ ದಿನಗಳಲ್ಲಿ ರಸ್ತೆಗಿಂತ ಗುಂಡಿಗಳೇ ಹೆಚ್ಚಿದ್ದವು. ಯಡಿಯೂರಪ್ಪ ಇದೇ ಕಾರನ್ನು ಸದಾ ಬಳಸುತ್ತಿದ್ದರು. ಅವರ ಪ್ರವಾಸಕ್ಕೆ ಶಕ್ತಿ ತುಂಬಿದ್ದು ಈ ಕಾರು ಎಂದರು.&lt;/p&gt;&lt;p&gt;ಶಂಕರ್ ಎಂಬುವರು ಹತ್ತಾರು ವರ್ಷ ಚಾಲಕರಾಗಿದ್ದರು. ಮಂಜಣ್ಣ ಎಂಬ ಮತ್ತೊಬ್ಬರು ಚಾಲಕರಾಗಿದ್ದರು. ಅವರು ನಮ್ಮ ಕುಟುಂಬ ಸದಸ್ಯರಂತೆ ಹದಿನೈದು ವರ್ಷ ಕಾರು ಓಡಿಸಿದ್ದಾರೆ. ಒಮ್ಮೆ ಮಾತ್ರ ಕಾರು ಅಡಿಮೇಲಾಗಿದ್ದು ಮತ್ತೆ ಯಾವುದೇ ಅವಘಡ ಸಂಭವಿಸಿಲ್ಲ. ಸುರಕ್ಷಿತವಾಗಿ ಇಡೀ ರಾಜ್ಯದಲ್ಲಿ ಬಿಎಸ್ ವೈ ಅವರನ್ನು ಈ ಕಾರು ಸುತ್ತಾಡಿಸಿದೆ ಎಂದರು.&lt;/p&gt;&lt;p&gt;ಅಭಿಮಾನೋತ್ಸವದಲ್ಲಿ ಈ ಕಾರು ಪ್ರಮುಖ ಆಕರ್ಷಣೆಯಾಗಿದ್ದು ಎಲ್ಲರೂ ಬಂದು ಕಾರಿನ ಬಳಿ ಪೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/bsy-abhimanotsavathe-story-behind-the-ambassador-car-that-is-a-major-attraction-rav/articleshow-wd966fx"/>
        </item>
        <item>
            <title><![CDATA[Renukaswamy case: ತಾಯಿ ರತ್ನಪ್ರಭಾ ಪಾಟೀಸವಾಲಿಗೆ ಅನುಮತಿ ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್!]]></title>
            <link>https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</link>
            <guid isPermaLink="true">https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</guid>
            <pubDate>Wed, 24 Jun 2026 13:12:54 +0530</pubDate>
            <description><![CDATA[ನಟ ದರ್ಶನ್ ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ರೇಣುಕಾಸ್ವಾಮಿ ತಾಯಿಯನ್ನು ಪಾಟೀಸವಾಲು ಮಾಡಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ದರ್ಶನ್ ಪರ ವಕೀಲರ ಮನವಿ ಮೇರೆಗೆ, ನ್ಯಾಯಾಲಯವು ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvw8zwc879afmx90k1vpec6f,imgname-renukaswamy-case-1782286643592.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.24): ಸ್ಯಾಂ&lt;/strong&gt;ಡಲ್&zwnj;ವುಡ್ ನಟ ದರ್ಶನ್ ಮತ್ತು ಗ್ಯಾಂಗ್&zwnj;ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾನೂನು ಹೋರಾಟ ತೀವ್ರಗೊಂಡಿದೆ. ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು ಪಾಟೀಸವಾಲು (Cross-examination) ನಡೆಸಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ.&lt;/p&gt;&lt;h3&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h3&gt;&lt;p&gt;ಈ ಹಿಂದೆ ಜನವರಿ ತಿಂಗಳಿನಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಪ್ರಾಸಿಕ್ಯೂಷನ್, ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು 'ಪ್ರತಿಕೂಲ ಸಾಕ್ಷಿ' (Hostile Witness) ಎಂದು ಪರಿಗಣಿಸಿ, ಅವರನ್ನು ಪಾಟೀಸವಾಲು ನಡೆಸಲು ಅನುಮತಿ ನೀಡುವಂತೆ ಕೋರಿತ್ತು. ಆದರೆ, ಪ್ರಾಸಿಕ್ಯೂಷನ್&zwnj;ನ ಈ ಮನವಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿತ್ತು. ಕೆಳಹಂತದ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್&zwnj;ಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.&lt;/p&gt;&lt;h2&gt;&lt;strong&gt;ಹೈಕೋರ್ಟ್&zwnj;ನಲ್ಲಿ ನಡೆದಿದ್ದೇನು?&lt;/strong&gt;&lt;/h2&gt;&lt;p&gt;ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್&zwnj;ನ ಏಕಸದಸ್ಯ ಪೀಠವು ಕೈಗೆತ್ತಿಕೊಂಡಿತು. ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಹಾಜರಾಗಿ, ವಾದ ಮಂಡಿಸಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಮನವಿ ಮಾಡಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.&lt;/p&gt;&lt;p&gt;ದರ್ಶನ್ ಮತ್ತು ತಂಡದ ವಿರುದ್ಧದ ಈ ಕೊಲೆ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಸಾಕ್ಷಿಗಳ ವಿಚಾರಣೆ ಮತ್ತು ಪಾಟೀಸವಾಲು ಪ್ರಕ್ರಿಯೆಗಳು ಅತ್ಯಂತ ನಿರ್ಣಾಯಕವಾಗಿವೆ. ರತ್ನಪ್ರಭಾ ಅವರ ಸಾಕ್ಷ್ಯವು ಈ ಪ್ರಕರಣದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗ ಹೈಕೋರ್ಟ್ ಜುಲೈ 2 ರಂದು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby"/>
        </item>
        <item>
            <title><![CDATA[Guarantee Schemes: ಗ್ಯಾರಂಟಿ ಯೋಜನೆ ನಿಲ್ಲುತ್ತದೆಯೇ? ಎಚ್‌.ಎಂ.ರೇವಣ್ಣ ಕೊಟ್ಟ ಉತ್ತರ ವೈರಲ್!]]></title>
            <link>https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus</link>
            <guid isPermaLink="true">https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus</guid>
            <pubDate>Wed, 17 Jun 2026 22:24:18 +0530</pubDate>
            <description><![CDATA[&lt;p&gt;Guarantee Schemes: ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಪರಿಷ್ಕರಣೆಯ ನಂತರ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸವಲತ್ತುಗಳು ಸಿಗಲಿವೆ ಎಂದು ಎಚ್&zwnj;.ಎಂ.ರೇವಣ್ಣ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01d78sjgbykh9545bd2m9me2zj,imgname-HM-revanna.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸದುರ್ಗ (ಜೂ.17): &lt;/strong&gt;ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಪರಿಷ್ಕರಣೆಯ ನಂತರ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸವಲತ್ತುಗಳು ಸಿಗಲಿವೆ ಎಂದು ಗ್ಯಾರಂಟಿ ಯೋಜನೆಯ ರಾಜ್ಯಾಧ್ಯಕ್ಷ ಎಚ್&zwnj;.ಎಂ.ರೇವಣ್ಣ ಹೇಳಿದರು.&lt;/p&gt;&lt;p&gt;ಪಟ್ಟಣದ ಗ್ಯಾರಂಟಿ ಯೋಜನೆ ಸಮಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದ ಪ್ರತಿಯೊಬ್ಬ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪಬೇಕು ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವುದು ಈ ಯೋಜನೆಯ ಉದ್ದೇಶ ಆದರೆ ಕಳೆದ ಡಿಸೆಂಬರ್&zwnj;ನಲ್ಲಿ ನಡೆದ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಭೆಯಲ್ಲಿ ಸುಮಾರು 79 ಸಾವಿರ ಕೋಟಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗದೆ ಬ್ಯಾಂಕುಗಳಲ್ಲಿಯೇ ಉಳಿದ ಹಿನ್ನಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ ಎಂದರು.&lt;/p&gt;&lt;p&gt;ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುತ್ತಿದ್ದ ಬಿಜೆಪಿ ಇತ್ತೀಚಿಗೆ ನಡೆದ ಹಲವು ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದೆ. ಹಾಗಾದರೆ ಆ ರಾಜ್ಯಗಳು ದೀವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು ಸಿದ್ದರಾಮಯ್ಯವನರು ಈ ಯೋಜನೆಗೆ ಬೇಕಾಗುವ ಅನುದಾನವನ್ನು ಕಾಯ್ದಿರಿಸಿಯೇ ಅನುಷ್ಠಾನ ತಂದಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಸರ್ಕಾರವಾಗಲಿ ರಾಜ್ಯವಾಗಲೀ ದಿವಾಳಿಯಾಗಿಲ್ಲ. ಈ ಕಾರ್ಯಕ್ರಮಗಳಿಂದ ಆರ್ಥಿಕವಾಗಿ ಹಿಂದುಳಿದವರು, ಬಡವರು ನಿರ್ಗತಿಕರು ಸಬಲರಾಗಲು ಸಾಧ್ಯವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಖಾತೆಗೆ ಹಾಕಲಾಗುವುದು&lt;/strong&gt;&lt;/h2&gt;&lt;p&gt;ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿಯ ಹಣ ನಮ್ಮ ರಾಜ್ಯದ ಜನರಿಗೆ ಸಿಗಬೇಕು ಎನ್ನುವುದು ಇಂದಿನ ಮುಖ್ಯಮಂತ್ರಿಗಳ ಉದ್ದೇಶ ಈ ಹಿನ್ನಲೆಯಲ್ಲಿ ಅತಿ ಶೀಘ್ರದಲ್ಲಿಯೇ ಪರಿಷ್ಕರಣೆ ಮಾಡಿ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದರು. ವಿರೋಧ ಪಕ್ಷದ ನಾಯಕರು ಈ ಕಮಿಟಿ ಯಾಕೇ ಬೇಕು ಎಂದು ಪ್ರಶ್ನಿಸಿದ್ದಾರೆ, ಈ ಕಾರ್ಯಕ್ರಮವನ್ನು ಕಂಡು ಹಿಡಿದವರೇ ನಾವು ರಾಜ್ಯದಲ್ಲಿ 4ಸಾವಿರ ಈ ಕಮಿಟಿಯ ಪಡೆ ಇದೆ. ಅಲ್ಲದೆ 5 ಇಲಾಖೆಗಳ ಅಧಿಕಾರಿಗಳ ಸಂಪರ್ಕದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಇದಲ್ಲದೆ ಶೀಘ್ರವಾಗಿ ನೋಂದಣಿಗೆ ಅನುಕೂಲವಾಗಲೆಂದು ಆ್ಯಪ್&zwnj; ವೊಂದನ್ನು ಸೃಷ್ಟಿಸಲಾಗುತ್ತಿದೆ ಎಂದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus"/>
        </item>
    </channel>
</rss>
