<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sat, 18 Jul 2026 10:47:15 +0530</lastBuildDate>
        <atom:link href="https://kannada.asianetnews.com/rss/chitradurga" rel="self" type="application/rss+xml"/>
        <item>
            <title><![CDATA[ಸುಹಾಸ್ ಸುಧಾಕರ್‌ ರಾಜಕೀಯ ಅಖಾಡ ಪ್ರವೇಶಿಸುವುದು ಖಚಿತ, ಕೈ ಶಾಸಕರ ಬಾಯಿಂದಲೇ ಸುಧಾಕರ್ ಕುಟುಂಬಕ್ಕೆ ಟಿಕೇಟ್ ಸಂದೇಶ]]></title>
            <link>https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4</link>
            <guid isPermaLink="true">https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4</guid>
            <pubDate>Fri, 22 May 2026 15:04:07 +0530</pubDate>
            <description><![CDATA[&lt;p&gt;ವರದಿ: ಜಡೇಕುಂಟೆ ಮಂಜುನಾಥ್&lt;/p&gt;&lt;p&gt;ದಿವಂಗತ ಸಚಿವ ಡಿ. ಸುಧಾಕರ್ ಅವರ ನಿಧನದ ನಂತರ ಪುತ್ರ ಸುಹಾಸ್ ರಾಜಕೀಯ ಅಖಾಡಕ್ಕೆ ಧುಮುಕುವುದು ನಿಶ್ಚಿತವಾಗಿದೆ. ಅಪ್ಪನ ಉತ್ತರಾಧಿಕಾರಿಯಾಗಿ ಹಿರಿಯೂರಿನಲ್ಲಿ ಬೆಂಬಲಿಗರನ್ನು ಭೇಟಿಯಾಗಿರುವ ಸುಹಾಸ್ ಅವರ ರಾಜಕೀಯ ಭವಿಷ್ಯವು ಇದೀಗ ಮತದಾರರು ಮತ್ತು ಪಕ್ಷದ ನಾಯಕರ ಕೈಯಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks7g1h7ggea0zac9d36yxdt7,imgname-suhas-sudhakar--2--1779441911024.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಜಡೇಕುಂಟೆ ಮಂಜುನಾಥ್&lt;/p&gt;&lt;p&gt;ದಿವಂಗತ ಸಚಿವ ಡಿ. ಸುಧಾಕರ್ ಅವರ ನಿಧನದ ನಂತರ ಪುತ್ರ ಸುಹಾಸ್ ರಾಜಕೀಯ ಅಖಾಡಕ್ಕೆ ಧುಮುಕುವುದು ನಿಶ್ಚಿತವಾಗಿದೆ. ಅಪ್ಪನ ಉತ್ತರಾಧಿಕಾರಿಯಾಗಿ ಹಿರಿಯೂರಿನಲ್ಲಿ ಬೆಂಬಲಿಗರನ್ನು ಭೇಟಿಯಾಗಿರುವ ಸುಹಾಸ್ ಅವರ ರಾಜಕೀಯ ಭವಿಷ್ಯವು ಇದೀಗ ಮತದಾರರು ಮತ್ತು ಪಕ್ಷದ ನಾಯಕರ ಕೈಯಲ್ಲಿದೆ.&lt;/p&gt;&lt;img&gt;&lt;p&gt;ಚಳ್ಳಕೆರೆ: ಚಳ್ಳಕೆರೆ ಗೊಮ್ಮಟ ನಿಲಯದಿಂದ ಬೆಂಗಳೂರಿನ ವಿಧಾನಸೌಧದವರೆಗೂ ಸುಮಾರು ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ಮಂತ್ರಿಯಾಗಿ ಹೋಗಿ ಬಂದಿದ್ದ ಡಿ.ಸುಧಾಕರ್ ಅವರು ಅನಾರೋಗ್ಯದಿಂದ ಈಚೆಗೆ ನಿಧನರಾದ ಮೇಲೆ ಅವರ ಪುತ್ರ ಸುಹಾಸ್ ರಾಜಕೀಯ ಅಖಾಡ ಪ್ರವೇಶಿಸುವುದು ನಿಕ್ಕಿಯಾಗಿದೆ.&lt;/p&gt;&lt;img&gt;&lt;p&gt;ಇದಕ್ಕೆ ಪುಷ್ಟೀಕರಿಸುವ ಬೆಳೆವಣಿಗೆಗಳು ಈಗಾಗಲೇ ಹಿರಿಯೂರು ಚಳ್ಳಕೆರೆಯಲ್ಲಿ ಜರುಗಿವೆ. ಅಪ್ಪನ ಉತ್ತರಾಧಿಕಾರಿಯಾಗಲು ಇದೀಗ ಸುಹಾಸ್ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ಹಿರಿಯೂರಿನ ಕಾಂಗ್ರೆಸ್ ಕಚೇರಿಗೆ ತೆರಳಿ ಅಪ್ಪನ ಅನುಯಾಯಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿ ಬಂದಿರುವ ಸುಧಾಕರ್ ಪುತ್ರ ಸುಹಾಸ್ ಅವರಲ್ಲಿ ಸುಧಾಕರ್ ಪ್ರತಿಬಿಂಬವನ್ನು ಕಾಣುತ್ತಿರುವ ಹಿರಿಯೂರಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಜಿಲ್ಲೆಯ ಅಭಿಮಾನಿಗಳಿಗೆ ಕೊಂಚ ನಿಟ್ಟುಸಿರು ಬಿಟ್ಟಂತಾಗಿರುವುದು ನಿಜ. ಏಕೆಂದರೆ ಮೂರು ಅವಧಿಗೆ ಸುಧಾಕರ್ ಅವರನ್ನು ಶಾಸನ ಸಭೆಗೆ ಆರಿಸಿ ಕಳುಹಿಸಲು ಹಿರಿಯೂರಿನ ಜನತೆಯ ಆರ್ಶೀವಾದವೇ ಕಾರಣ. ಜನನಾಯಕನಾಗಿ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಎಲ್ಲರ ಪ್ರೀತಿಯ ಸುಧಣ್ಣ ದೀಢೀರನೆ ಎದ್ದು ಹೋಗಿದ್ದು ಮಾತ್ರ ಯಾರಿಗೂ ಜೀರ್ಣಿಸಿಕೊಳ್ಳಲು ಆಗಲಿಲ್ಲ.&lt;/p&gt;&lt;p&gt;ಇವರ ನಂತರ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಹೈಕಮಾಂಡ್ ಅವಕಾಶವೇ ಕೊಡಲಿಲ್ಲ. ಜಿಲ್ಲೆಯ ಕಾಂಗ್ರೆಸ್ ಶಾಸಕರ ಬಾಯಿಂದಲೇ ಸುಧಾಕರ್ ಕುಟುಂಬಕ್ಕೆ ಟಿಕೇಟ್ ಎಂಬ ಸಂದೇಶವನ್ನು ಹೇಳಿಸುವ ಮೂಲಕ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟೇ ಬಿಟ್ಟಿತು. ಆಗ ಸುಧಾಕರ್ ಪುತ್ರ ಸುಹಾಸ್ ಹಿರಿಯೂರಿನ ಅಖಾಡಕ್ಕೆ ಇಳಿದರು.&lt;/p&gt;&lt;img&gt;&lt;p&gt;ಇತ್ತ ಚಳ್ಳಕೆರೆಯಲ್ಲಿ ಪ್ರಥಮವಾಗಿ ನುಡಿನಮನ ಕಾರ್ಯಕ್ರಮ ಮಾಡಿದ ಶಾಸಕ ರಘುಮೂರ್ತಿ ಅವರು ಸುಧಾಕರ್ ಕುಟುಂಬದ ಜೊತೆ ಇರುತ್ತೇವೆ ಎಂಬ ಸಂದೇಶವನ್ನು ರವಾನಿಸಿಬಿಟ್ಟರು. ಚಳ್ಳಕೆರೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಸುಧಾಕರ್ ಸಾಧನೆಗಳನ್ನು ಹಾಗೂ ಅವರ ಸಮಾಜ ಸೇವೆಯನ್ನು ಸೇರಿದಂತೆ ಇನ್ನಿತರೆ ಗುಣಾವಗುಣಗಳನ್ನು ಅವಲೋಕನ ಮಾಡಿದ ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವ ಎಚ್.ಆಂಜನೇಯ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರೂ ಕೂಡ ಇದೇ ಅರ್ಥ ಬರುವ ಮಾತುಗಳನ್ನಾಡಿದ್ದರು.&lt;/p&gt;&lt;p&gt;ಕೆ.ಸಿ.ವೀರೇಂದ್ರ ಪಪ್ಪಿ ಹಿರಿಯೂರಿಗೆ ತೆರಳಿ ಸುಹಾಸ್ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ ಸಮಾಲೋಚನ ಸಭೆ ನಡೆಸಿ ಬಂದಿದ್ದಾರೆ. ಹಿರಿಯೂರು ತಾಲೂಕಿನ ಮುಖಂಡರು ಸುಹಾಸ್ ಆಗಮನವನ್ನು ಎದುರು ನೋಡುತ್ತಿದ್ದಾರೆ. ಹೇಗೋ ದೊಡ್ಡವರು ಹೋದ್ರು. ಅವರ ಪುತ್ರ ಬಂದರು ಎಂಬ ಸಮಾಧಾನಕ್ಕೆ ಮೊರೆಹೋಗಿದ್ದಾರೆ.&lt;/p&gt;&lt;img&gt;&lt;p&gt;ಅಪ್ಪನಷ್ಟು ಅನುಭವವಿಲ್ಲದಿದ್ದರೂ ಅಪ್ಪನ ಒಳಗಿದ್ದ ಮಾನವೀಯ ಸೆಲೆಗಳಿವೆ ಎಂಬುದನ್ನು ಸುಹಾಸ್ ಮೊದಲ ಯತ್ನದಲ್ಲೇ ಅನಾವರಣಗೊಳಿಸಿದ್ದಾರೆ. ಇಂತಹ ಯುವಕ ರಾಜಕೀಯ ಅಖಾಡದಲ್ಲಿ ಇಳಿಯುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಮತದಾರ ಸೇರಿದಂತೆ ಕಾಂಗ್ರೆಸ್ ಧುರೀಣರು ಕೈ ಹಿಡಿಯುತ್ತಾರಾ ಎಂಬ ಪ್ರಶ್ನೆಗಳು ಎದುರಾಗಿವೆ. ಜಿಲ್ಲೆಯಲ್ಲಿ ಬಹುತೇಕ ಜನರಿಗೆ ಸಹಾಯದ ಹಸ್ತ ಚಾಚಿರುವ ಸುಧಾಕರ್ ಅವರು ರಾಜಕೀಯವಾಗಿಯೂ ಅನೇಕರನ್ನು ಬೆಳೆಸಿದ್ದಾರೆ. ಇದೀಗ ಅವರ ಮಗನನ್ನು ಮತದಾರ, ಕಾಂಗ್ರೆಸ್ ಮುಖಂಡರು ಹೈಕಮಾಂಡ್ ಕೈಹಿಡಿಯಬೇಕಿದೆ. ಸುಧಾಕರ್ ಬದುಕಿದ್ದಾಗ ಯಾವುದೇ ಚುನಾವಣೆಯಾಗಲಿ ಸುಧಾಕರ್ ಹೇಳಿದವರೇ ಚುನಾಯಿತರಾಗುತ್ತಿದ್ದ ಕಾಲವೊಂದಿತ್ತು. ಆದರೆ, ಇದೀಗ ಅವರ ಕುಟುಂಬದ ಕುಡಿಯನ್ನು ಹಿರಿಯೂರಿನ ಜನತೆ ಪೊರೆಯಬೇಕಿದೆ.&lt;/p&gt;&lt;img&gt;&lt;p&gt;ಚಳ್ಳಕೆರೆಯವರೇ ಆದ ಸುಧಾಕರ್ ಅವರ ಪುತ್ರ ಸುಹಾಸ್ ಅವರನ್ನು ಚಳ್ಳಕೆರೆ ಕ್ಷೇತ್ರದ ಶಾಸಕ ರಘುಮೂರ್ತಿ, ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕೈ ಹಿಡಿಯಲೇ ಬೇಕಿದೆ. ಏಕೆಂದರೆ, ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಸುಧಾಕರ್ ಇವರೆಲ್ಲರಿಗೂ ಬೆನ್ನೆಲುಬಾಗಿದ್ದವರು. ಅಂತಹ ರಾಜಕೀಯ ಋಣಸಂದಾಯಕ್ಕಾಗಿ ಸುಧಾಕರ್ ಕುಟುಂಬದ ಕುಡಿಯನ್ನು ರಾಜಕೀಯ ಪಡಸಾಲೆಗೆ ಕರೆತರುತ್ತಾರಾ? ಇಂತಹ ಚರ್ಚೆಗಳು ಇದೀಗ ಜಿಲ್ಲೆಯಲ್ಲಿ ಗರಿಗೆದರಿವೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/politics/chitradurga-politics-late-minister-d-sudhakar-son-suhas-set-for-political-entry-in-hiriyur-gdp-01p2gs4"/>
        </item>
        <item>
            <title><![CDATA[ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್:  6 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!]]></title>
            <link>https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</link>
            <guid isPermaLink="true">https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</guid>
            <pubDate>Wed, 08 Jul 2026 11:25:56 +0530</pubDate>
            <description><![CDATA[ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಮೆಗಾ ಆಪರೇಷನ್&zwnj;ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx04edrp64anbam01r602epp,imgname-lokayukta-raids-in-across-karnataka-1783489836822.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನೂರಾರು ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ಮೆಗಾ ಆಪರೇಷನ್ ಕೈಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ಧಾರವಾಡ ಮತ್ತು ಶಿವಮೊಗ್ಗ: ಎಸಿಎಫ್ ಕಿರಣ್ ಅಂಗಡಿಗೆ ಶಾಕ್!&lt;/h2&gt;&lt;p&gt;ಶಿವಮೊಗ್ಗದ ಅರಣ್ಯ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಆಗಿ ಸೇವೆ ಸಲ್ಲಿಸುತ್ತಿರುವ ಕಿರಣ್ ಅಂಗಡಿ ಅವರಿಗೆ ಸೇರಿದ ಧಾರವಾಡ ಮತ್ತು ಶಿವಮೊಗ್ಗದ ಒಟ್ಟು ೫ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಧಾರವಾಡದ ಲೋಕಾ ಎಸ್ಪಿ ಸಿದ್ದಲಿಂಗಪ್ಪ ಹಾಗೂ ಶಿವಮೊಗ್ಗದ ಲೋಕಾಯುಕ್ತ ಇನ್&zwnj;ಸ್ಪೆಕ್ಟರ್ ವೀರಬಸಪ್ಪ ಕುಶಲಾಪೂರ ಮತ್ತು ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿರುವ ಐಷಾರಾಮಿ ಮನೆ, ಅಳ್ನಾವರ ರಸ್ತೆಯಲ್ಲಿರುವ ಫಾರ್ಮ್ ಹೌಸ್, ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪತ್ನಿಯ ಹೆಸರಿನಲ್ಲಿದೆ ಎನ್ನಲಾದ ಉದ್ಯಮ) ಹಾಗೂ ಅವರ ಸೋದರ ಮಾವನ ಮನೆಗಳ ಮೇಲೆ ಶೋಧ ನಡೆಸಲಾಗುತ್ತಿದೆ.&lt;/p&gt;&lt;h2&gt;ಶಿವಮೊಗ್ಗದ ಕಚೇರಿ ಮೇಲೂ ದಾಳಿ&lt;/h2&gt;&lt;p&gt;ಇತ್ತ ಶಿವಮೊಗ್ಗದ ಆಲ್ಕೋಳ ರಸ್ತೆಯಲ್ಲಿರುವ ಕಿರಣ್ ಅಂಗಡಿ ಅವರ ಅರಣ್ಯ ಸಂಶೋಧನಾ ಕಚೇರಿಯ ಮೇಲೂ ಲೋಕಾಯುಕ್ತ ತಂಡ ತಪಾಸಣೆ ನಡೆಸುತ್ತಿದೆ. ದಾಳಿಯ ವೇಳೆ ಅಧಿಕಾರಿ ಕಿರಣ್ ಅಂಗಡಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಐದು ಜನರ ಅಧಿಕಾರಿಗಳ ತಂಡ ಸದ್ಯ ದಾಖಲೆಗಳನ್ನು ಜಾಲಾಡುತ್ತಿದೆ.&lt;/p&gt;&lt;h2&gt;ರಾಯಚೂರು: ಕೆಬಿಜೆಎನ್&zwnj;ಎಲ್ ಇಇ ಬಸನಗೌಡಗೆ ಸೇರಿದ 7 ಕಡೆ ದಾಳಿ&lt;/h2&gt;&lt;p&gt;ರಾಯಚೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಇಂಜಿನಿಯರ್ (EE) ಬಸನಗೌಡ ಅವರ ವಿರುದ್ಧ ಲೋಕಾಯುಕ್ತರು ತನಿಖೆ ತೀವ್ರಗೊಳಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ 7 ಪ್ರತ್ಯೇಕ ತಂಡಗಳು ಏಕಕಾಲದಲ್ಲಿ 7 ಕಡೆ ಧಾಳಿ ನಡೆಸಿವೆ. ಬಸನಗೌಡ ಅವರ ರಾಯಚೂರು ನಗರದ ಎಚ್.ಆರ್.ಬಿ ಲೇಔಟ್&zwnj;ನಲ್ಲಿರುವ ಮನೆ, ಯಕ್ಲಾಸಪುರದ ಸೆಲೆಬ್ರಿಟಿ ಗಾರ್ಡನ್&zwnj;ನಲ್ಲಿರುವ ಅಣ್ಣನ ಮನೆ ಹಾಗೂ ಯಕ್ಲಾಪುರದ ತೋಟದ ಮನೆಯಲ್ಲಿ ಶೋಧ ಕಾರ್ಯ ಪ್ರಗತಿಯಲ್ಲಿದೆ.&lt;/p&gt;&lt;h2&gt;ಬಾರ್ ಮತ್ತು ಪೆಟ್ರೋಲ್ ಬಂಕ್ ಪತ್ತೆ&lt;/h2&gt;&lt;p&gt;ಬಸನಗೌಡ ಅವರ ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ನಾಯರಾ ಪೆಟ್ರೋಲ್ ಬಂಕ್, ಅದರ ಪಕ್ಕದಲ್ಲೇ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಗೋದಾಮಿನ (Warehouse) ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ದೇವದುರ್ಗ ತಾಲೂಕಿನ ಚಿಕ್ಕ ಹೊನ್ನಕುಣಿ ವ್ಯಾಪ್ತಿಯ ಕೆಬಿಜೆಎನ್&zwnj;ಎಲ್ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.&lt;/p&gt;&lt;h2&gt;ಚಿತ್ರದುರ್ಗ ಆರ್&zwnj;ಎಫ್&zwnj;ಒ ಮತ್ತು ಪ್ರೊಫೆಸರ್ ಮನೆಗೆ ಅಧಿಕಾರಿಗಳ ಎಂಟ್ರಿ&lt;/h2&gt;&lt;p&gt;ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಬ್ಬರು ಪ್ರಮುಖ ಅಧಿಕಾರಿಗಳ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ. ಚಿತ್ರದುರ್ಗದ ಧವಳಗಿರಿ ಬಡಾವಣೆಯಲ್ಲಿರುವ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ಮನೆ ಹಾಗೂ ತೋಟದ ಮೇಲೂ ಲೋಕಾಯುಕ್ತರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;ಕಲಬುರಗಿ ಜೇಸ್ಕಾಂ ಎಇಇ ಅಮೃತರಾವ್ ಯಲಾಲ್ ಮನೆ, ಫ್ಲ್ಯಾಟ್ ಮೇಲೆ ದಾಳಿ&lt;/h2&gt;&lt;p&gt;ಕಲಬುರಗಿಯಲ್ಲಿ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅಮೃತರಾವ್ ಯಲಾಲ್ ಅವರಿಗೆ ಸೇರಿದ ಕಚೇರಿ ಹಾಗೂ ಮನೆ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ಮಾಡಿದೆ. ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಬಸವ ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಫ್ಲ್ಯಾಟ್, ಮತ್ತು ಕೊತ್ತಂಬರಿ ಲೇಔಟ್&zwnj;ನಲ್ಲಿರುವ ಜೇಸ್ಕಾಂ ಕಚೇರಿಗಳ ಮೇಲೆ ದಾಳಿಯಾಗಿದೆ. ಇದಲ್ಲದೆ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಮನೆಯ ಮೇಲೂ ಅಧಿಕಾರಿಗಳು ಮುಗಿಬಿದ್ದಿದ್ದಾರೆ. ಎಇಇ ಅಮೃತರಾವ್ ಅವರು ಜಾಗೃತಿ ಕಾಲೋನಿಯಲ್ಲಿ 'ಪ್ಲಾಟಿನಂ ಸ್ಟುಡಿಯೋ' ಎಂಬ ಹೈಟೆಕ್ ಸ್ಟುಡಿಯೋ ಹೊಂದಿದ್ದು, ನಂದೂರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫ್ಲ್ಯಾಟ್ ಹಾಗೂ ವಿವಿಧೆಡೆ 20 ಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ತುಮಕೂರು ಸಣ್ಣ ನೀರಾವರಿ ಇಲಾಖೆ ಎಇಇ ಮನೆ ಮೇಲೆ ಲೋಕಾ ದಾಳಿ&lt;/h2&gt;&lt;p&gt;ಸಣ್ಣ ನೀರಾವರಿ ಇಲಾಖೆಯಲ್ಲಿ ಎಇಇ ಆಗಿರುವ ಮಧುಸೂದನ್ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಮಧುಸೂದನ್ ಮನೆ. ಸಣ್ಣ ನೀರಾವರಿ ಇಲಾಖೆ ತಿಪಟೂರು ಉಪವಿಭಾಗದಲ್ಲಿ ಎಇಇ ಆಗಿ ಕೆಲಸ ಮಾಡುತ್ತಿರುವ ಮಧುಸೂದನ್ ಅಕ್ರಮ ಹಣ ಗಳಿಕೆ ಆರೋಪದಡಿ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಲೋಕಾ ದಾಳಿ. ಮಧುಸೂದನ್ ಮನೆಯನ್ನ ಪರಿಶೀಲನೆ ನಡೆಸುತ್ತಿರುವ ಲೋಕಾ ಟೀಮ್. ಸದ್ಯ ಎಲ್ಲಾ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ಚಿನ್ನಾಭರಣ, ನಗದು ಹಾಗೂ ಬ್ಯಾಂಕ್ ಖಾತೆಗಳ ವಿವರಗಳು ಲಭ್ಯವಾಗಬೇಕಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet"/>
        </item>
        <item>
            <title><![CDATA[ಚಿತ್ರದುರ್ಗ: ಕತ್ತಿಗೆ ಗ್ರ್ಯಾನೈಟ್ ಕಲ್ಲು ಬಿದ್ದು CUDA ಮಾಜಿ ಅಧ್ಯಕ್ಷರ ಪುತ್ರ ಸಾವು, ಕುಟುಂಬದಿಂದ ಮಗನ ಕಣ್ಣುದಾನ]]></title>
            <link>https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</link>
            <guid isPermaLink="true">https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</guid>
            <pubDate>Thu, 18 Jun 2026 19:16:35 +0530</pubDate>
            <description><![CDATA[ಚಿತ್ರದುರ್ಗದ ಮಾರ್ಬಲ್ಸ್ ಗೋದಾಮಿನಲ್ಲಿ ಗ್ರ್ಯಾನೈಟ್ ಬಿಲ್ಲೆ ಕುತ್ತಿಗೆ ಮೇಲೆ ಬಿದ್ದು ರಾಣಾ ಪ್ರತಾಪ್ ಸಿಂಹ ಎಂಬ ಯುವಕ ದುರಂತ ಸಾವಿಗೀಡಾಗಿದ್ದಾನೆ. ಈ ದುಃಖದ ನಡುವೆಯೂ, ಮೃತನ ಕುಟುಂಬವು ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvdevgwcwgcyyz8echjjk5ne,imgname-chitradurga-warehouse-accident-1781789475724.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಕೋಟೆನಾಡು ಚಿತ್ರದುರ್ಗ ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿರುವ ಮಾರ್ಬಲ್ಸ್ ಗೋದಾಮಿನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಗ್ರ್ಯಾನೈಟ್&zwnj;ಗಳನ್ನು ಗೋದಾಮಿಗೆ ಶಿಫ್ಟ್ ಮಾಡುವ ವೇಳೆ ಭಾರಿ ಗಾತ್ರದ ಗ್ರ್ಯಾನೈಟ್ ಬಿಲ್ಲೆಯೊಂದು ಆಕಸ್ಮಿಕವಾಗಿ ಕುತ್ತಿಗೆಯ ಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.&lt;/p&gt;&lt;p&gt;ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರ ಪುತ್ರ ರಾಣಾ ಪ್ರತಾಪ್ ಸಿಂಹ (30) ಮೃತಪಟ್ಟ ದುರ್ದೈವಿ ಯುವಕ. ಈ ಹಠಾತ್ ದುರಂತವು ಮೃತರ ಕುಟುಂಬಸ್ಥರು ಹಾಗೂ ಸ್ನೇಹಿತರ ವಲಯದಲ್ಲಿ ಭಾರೀ ಆಘಾತ ಮೂಡಿಸಿದೆ.&lt;/p&gt;&lt;h2&gt;ದುರಂತ ಸಂಭವಿಸಿದ್ದು ಹೇಗೆ?&lt;/h2&gt;&lt;p&gt;ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ 'ದೇವಿ ಮಾರ್ಬಲ್ಸ್ ಮತ್ತು ಗ್ರ್ಯಾನೈಟ್ಸ್' ಗೋದಾಮಿನಲ್ಲಿ ಈ ದುರ್ಘಟನೆ ನಡೆದಿದೆ. ಗೋದಾಮಿಗೆ ಹೊಸದಾಗಿ ಬಂದಿದ್ದ ಗ್ರ್ಯಾನೈಟ್ ಲೋಡ್ ಅನ್ನು ಕಾರ್ಮಿಕರು ಅನ್ಲೋಡ್ ಮಾಡಿ ಒಳಗೆ ಜೋಡಿಸಿ ಇಡುತ್ತಿದ್ದರು. ಈ ವೇಳೆ ರಾಣಾ ಪ್ರತಾಪ್ ಸಿಂಹ ಅವರು ಗೋದಾಮಿನ ಒಳಗಿನ ಗೋಡೆಯೊಂದರ ಪಕ್ಕದಲ್ಲಿ ನಿಂತು ಗಮನಿಸುತ್ತಿದ್ದರು ಎನ್ನಲಾಗಿದೆ. ದುರದೃಷ್ಟವಶಾತ್, ಗ್ರ್ಯಾನೈಟ್ ಬಿಲ್ಲೆಗಳನ್ನು ಸ್ಥಳಾಂತರಿಸುವಾಗ ನಿಯಂತ್ರಣ ತಪ್ಪಿ ಭಾರಿ ತೂಕದ ಗ್ರ್ಯಾನೈಟ್ ಕಲ್ಲು ನೇರವಾಗಿ ಗೋಡೆ ಬಳಿ ನಿಂತಿದ್ದ ಪ್ರತಾಪ್ ಅವರ ಕುತ್ತಿಗೆಯ ಭಾಗಕ್ಕೆ ಬಿದ್ದಿದೆ. ಕಲ್ಲಿನ ಭೀಕರ ಹೊಡೆತ ಹಾಗೂ ತೂಕಕ್ಕೆ ಕುತ್ತಿಗೆಯ ಭಾಗ ತೀವ್ರವಾಗಿ ಜಜ್ಜಲ್ಪಟ್ಟು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ&lt;/h2&gt;&lt;p&gt;ಆದರ್ಶ ಯುವಕನಾಗಿದ್ದ ಪ್ರತಾಪ್ ಅವರ ಹಠಾತ್ ಸಾವು ತಂದೆ ತಿಪ್ಪೇಸ್ವಾಮಿ ಹಾಗೂ ಇಡೀ ಕುಟುಂಬವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ. ಮಗನನ್ನು ಕಳೆದುಕೊಂಡು ಕಣ್ಣೀರುಡುತ್ತಿದ್ದ ಸಂದರ್ಭದಲ್ಲೂ ಕುಟುಂಬಸ್ಥರು ಅತ್ಯಂತ ಶ್ಲಾಘನೀಯ ಹಾಗೂ ಸಾರ್ಥಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ನಮ್ಮ ಮಗ ಇನ್ನಿಲ್ಲವಾದರೂ ಅವನ ಕಣ್ಣುಗಳು ಮತ್ತೊಬ್ಬರಿಗೆ ಬೆಳಕಾಗಲಿ ಎಂಬ ಉದಾತ್ತ ಚಿಂತನೆಯಿಂದ ಮೃತ ರಾಣಾ ಪ್ರತಾಪ್ ಸಿಂಹ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.&lt;/p&gt;&lt;h2&gt;ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆ ಸಂಭವಿಸುತ್ತಿದ್ದಂತೆ ವಿಷಯ ತಿಳಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳ ಲೋಪದೋಷಗಳಿದ್ದವೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq"/>
        </item>
        <item>
            <title><![CDATA[Chitradurga: ಕುಸಿದುಬಿದ್ದು ಹಠಾತ್‌ ಸಾವನ್ನಪ್ಪಿದ ಚಿತ್ರದುರ್ಗದ ಡಿಆರ್‌ಎಫ್ಒ ವೆಂಕಟೇಶ್]]></title>
            <link>https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7</link>
            <guid isPermaLink="true">https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7</guid>
            <pubDate>Wed, 01 Jul 2026 17:41:36 +0530</pubDate>
            <description><![CDATA[&lt;p&gt;ಹಿರಿಯೂರು ತಾಲೂಕಿನ ಡಿಆರ್&zwnj;ಎಫ್&zwnj;ಒ ಆಗಿದ್ದ ವೆಂಕಟೇಶ್ (40) ಚಿತ್ರದುರ್ಗದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದ್ದರಿಂದ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kweseq1jdxpvadt9qyetekj4,imgname-forest-1782907886642.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗ: ಹಿರಿಯೂರು ತಾಲೂಕಿನಲ್ಲಿ ಡಿಆರ್&zwnj;ಎಫ್&zwnj;ಒ ಆಗಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಧಾರುಣ ಅಂತ್ಯ ಕಂಡಿದ್ದಾರೆ. ಆದರೆ ಸಾವಿಗೆ ಏನು ಕಾರಣ ಎನ್ನುವುದು ತಿಳಿಯದ ಕಾರಣ ಪ್ರಕರಣ ಬೇಧಿಸಲು ಖಾಕಿ ಪಡೆ ಸಜ್ಜಾಗಿದೆ. ಅಷ್ಟಕ್ಕೂ ಡಿಆರ್&zwnj;ಎಫ್&zwnj;ಒಗೆ ಆಗಿದ್ದೇನು? ಕುಸಿದು ಬಿದ್ದು ಸಾವನ್ನಪ್ಪಿದ್ದೇಕೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಕುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;h2&gt;&lt;strong&gt;ಯಾರು ಈ ಡಿಆರ್&zwnj;ಎಫ್&zwnj;ಒ?&lt;/strong&gt;&lt;/h2&gt;&lt;p&gt;ಮನುಷ್ಯನ ಜೀವನ ನೀರ ಮೇಲಿನ ಗುಳ್ಳೆಯಂತೆ ಎನ್ನುವುದು ಗಾದೆಯಾದರೂ ಮಾನವ ಬದುಕಿನಲ್ಲಿ ಸಹಜ ಅಳವಡಿಕೆಯಾಗಿದೆ. ಅದೇ ರೀತಿಯಾಗಿಯೆ ನಿಂತ, ನಿಂತಲ್ಲೇ ಒರ್ವ ವ್ಯಕ್ತಿ ಸಾವನಪ್ಪಿದ ಘಟನೆ ಚಿತ್ರದುರ್ಗದಲ್ಲಿ ಜೋಗಿ ಮಟ್ಟಿಯಲ್ಲಿ ಇರುವ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಪೊಲೀಸ ಮೂಲಗಳಿಂದ ತಿಳಿದು ಬಂದಿದೆ. ಹಿರಿಯೂರಲ್ಲಿ ಡಿಆರ್&zwnj;ಎಫ್&zwnj;ಒ ಆಗಿದ್ದ ವೆಂಕಟೇಶ್(40) ಮೃತ ವ್ಯಕ್ತಿ.&amp;nbsp;&lt;/p&gt;&lt;h3&gt;&lt;strong&gt;ಪ್ರಕರಣ ದಾಖಲಾಗಿದ್ದೆಲ್ಲಿ?&lt;/strong&gt;&lt;/h3&gt;&lt;p&gt;ಕುಸಿದು ಬಿದ್ದ ವೆಂಕಟೇಶ್ ಸಾವನ್ನು ಸಹಜವಾಗಿ ಸಾವನ್ನಪ್ಪಿದ್ದ ವೆಂಕಟೇಶ ಅವರ ಪ್ರಕರಣ ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಬಳಿ ದಿಡೀರ್ ಕುಸಿದು ಬಿದ್ದು ದುರ್ಮರಣ ಹೊಂದಿದ್ದ ವೆಂಕಟೇಶ್ ಪ್ರಕರಣದ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎನ್ನುವುದು ಖಾಕಿ ಮೂಲಗಳಿಂದ ತಿಳಿದು ಬಂದಿದೆ.&lt;/p&gt;&lt;h3&gt;&lt;strong&gt;ದಿಗ್ಭ್ರಮೆಗೆ ಒಳಗಾದ ಸಿಬ್ಬಂದಿ!&zwnj;&lt;/strong&gt;&lt;/h3&gt;&lt;p&gt;ಉಪ ವಲಯ ಅರಣ್ಯಾಧಿಕಾರಿಯೊಬ್ಬರು ದಿಢೀರನೆ ಕುಸಿದು ಬಿದ್ದು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಅಧಿಕಾರಿಯ ಹಠಾತ್ ನಿಧನವು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ತೀವ್ರ ದಿಗ್ಭ್ರಮೆ ಮತ್ತು ಆಘಾತ ಮೂಡಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್&zwnj; ಮೂಲ ಹಾಗೂ ಪೋಸ್ಟ್&zwnj; ಮಾಟಂ ನಿಂದ ಬರುವ ರಿಪೋರ್ಟ್ ಮೇಲೆ ಎಲ್ಲರ ಕಣ್ಣು ನೆಟ್ಟಿವೆ.&lt;/p&gt;&lt;h3&gt;&lt;strong&gt;ಕುಟುಂಬದಲ್ಲಿ ಮನೆ ಮಾಡಿದ ಸ್ಮಶಾನ ಮೌನ!&lt;/strong&gt;&lt;/h3&gt;&lt;p&gt;ಇಂದು ಇದ್ದ ವ್ಯಕ್ತಿ ನಾಳೆ ಇಲ್ಲ ಎಂದರೆ, ತಂದೆ-ತಾಯಿಯರಿಗೆ ಮಗ ಬೇಕಾದರೆ, ಇಂದು ಪುಟ್ಟ ಮಕ್ಕಳಿಗೆ ಇಲ್ಲಿ ತಂದೆಯ ಅನಿವಾರ್ಯತೆ ಇದೆ. ಆದ್ದರಿಂದ ಅವರ ಹಠಾತ್&zwnj; ನಿಧನ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಮೌನವಾದ ಮನೆಯಲ್ಲಿ ಇಂದು ಕಣ್ಣೀರಿನ ಹೊಳೆ ಹರಿಯುತ್ತಿದೆ. ಇತ್ತ ಅರಣ್ಯ ಸಿಬ್ಬಂದಿಗಳಿಗೂ ಈ ಶಾಕ್&zwnj; ನಿದ್ದೆಗೆಡಿಸಿದೆ. ಆದ್ದರಿಂದ ಪೊಲೀಸ್&zwnj; ಹಾಗೂ ವೈದ್ಯಕೀಯ ಮೂಲಗಳು ಅವರ ಸಾವಿನ ಕುರಿತು ಏನು ಹೇಳುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>chitradurga</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7"/>
        </item>
        <item>
            <title><![CDATA[ರೇಣುಕಾಸ್ವಾಮಿ ಕೇಸ್‌: ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣದ ಹಿಂದೆ ಪ್ರಭಾವಿಗಳಿರೋ ಶಂಕೆ? ಡೀಲ್ ಕೊಟ್ಟವರಿಗೂ ನಡುಕ]]></title>
            <link>https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz</link>
            <guid isPermaLink="true">https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz</guid>
            <pubDate>Wed, 08 Jul 2026 12:28:16 +0530</pubDate>
            <description><![CDATA[ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ. ಪ್ರಭಾವಿಗಳ ಸೂಚನೆ ಮೇರೆಗೆ ನಡೆದಿದೆ ಎನ್ನಲಾದ ಈ 'ಡೀಲ್'ನ ರಹಸ್ಯವನ್ನು ಆರೋಪಿಗಳ ಮೊಬೈಲ್ ಫೋನ್&zwnj;ನ ಎಫ್&zwnj;ಎಸ್&zwnj;ಎಲ್ ವರದಿ ಬಯಲು ಮಾಡುವ ನಿರೀಕ್ಷೆಯಿದೆ, ಇದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01j0q7cynrazcp8gfx4vw71q87,imgname-Renukaswamy-Murder-Case-1718766435000.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ನಟ ದರ್ಶನ್ ಅವರನ್ನು ಈ ಕೊಲೆ ಕೇಸ್&zwnj;ನಿಂದ ಹೇಗಾದರೂ ಮಾಡಿ ಪಾರು ಮಾಡಬೇಕು ಎಂದು ಯಾರದ್ದೋ ಮಾತು ಕೇಳಿ ಸಾಕ್ಷಿಗಳ ನಾಶಕ್ಕೆ ಇಳಿದಿದ್ದ ದರ್ಶನ್ ಅಭಿಮಾನಿ ಸಂಘದ ಪ್ರಮುಖರು ಈಗ ತಾವೇ ಕಾನೂನಿನ ಉರುಳಿಗೆ ಸಿಲುಕಿದ್ದಾರೆ. ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಒಡ್ಡಿ ಸಿಕ್ಕಿಬಿದ್ದಿರುವ ಆರೋಪಿಗಳ ಜಾಲದ ಹಿಂದೆ ಚಿತ್ರರಂಗದ ಪ್ರಭಾವಿ ವ್ಯಕ್ತಿಗಳು ಅಥವಾ ರಾಜಕೀಯದ ಪ್ರಭಾವಿ ವ್ಯಕ್ತಿಗಳು ಇರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದೆ.&lt;/p&gt;&lt;h2&gt;ಸಾಕ್ಷಿ ನಂ. 49 ಸಂದೀಪ್&zwnj;ಗೆ ಬೆದರಿಕೆ ಹಾಕಿದ್ದ ಮೂವರ ಬಂಧನ&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿಯಾಗಿರುವ ಚಿತ್ರದುರ್ಗದ ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್&zwnj;ನ ಕ್ಯಾಷಿಯರ್ ಸಂದೀಪ್&zwnj;ಗೆ ಇತ್ತೀಚೆಗೆ ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಕರೆ ಮಾಡಿಸಲಾಗಿತ್ತು. ನಾವು ಹೇಳಿದಂತೆ ಕೋರ್ಟ್&zwnj;ನಲ್ಲಿ ಸಾಕ್ಷ್ಯ ನುಡಿಯಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಕುರಿತು ಸಂದೀಪ್ ಸ್ವತಃ ನ್ಯಾಯಾಧೀಶರ ಮುಂದೆ ಧೈರ್ಯವಾಗಿ ನನಗೆ ಸುಳ್ಳು ಸಾಕ್ಷಿ ನುಡಿಯುವ ಬೆದರಿಕೆ ಇದೆ ಎಂದು ಜವಾಬ್ದಾರಿ ಹೇಳಿಕೆ ನೀಡಿದ್ದರು.&lt;/p&gt;&lt;p&gt;ವಿಚಾರಣೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಬೆದರಿಕೆ ಹಾಕಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಲು ಮತ್ತು ಸಾಕ್ಷಿಗೆ ಸೂಕ್ತ ರಕ್ಷಣೆ ನೀಡಲು ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಗೆ ಇಳಿದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಟ ದರ್ಶನ್ ಅಭಿಮಾನಿ ಸಂಘದ ಸದಸ್ಯರಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದರು.&lt;/p&gt;&lt;h2&gt;10 ದಿನ ಪೊಲೀಸ್ ಕಸ್ಟಡಿಯಲ್ಲಿ ಪುನೀತ್: ಬಾಯಿ ಬಿಟ್ಟರೆ ಅನಾಹುತ!&lt;/h2&gt;&lt;p&gt;ಬಂಧಿತರ ಪೈಕಿ ತೀವ್ರ ವಿಚಾರಣೆಗೆ ಒಳಗಾಗಿರುವ ದಾಸನ ಅಭಿಮಾನಿ ಪುನೀತ್ ನನ್ನು ಪೊಲೀಸರು ಸದ್ಯ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ಈ ಪುನೀತ್ ಪೊಲೀಸರ ಮುಂದೆ ನಿರಂತರವಾಗಿ ಮರು ಹೇಳಿಕೆಗಳನ್ನು ದಾಖಲಿಸುತ್ತಿದ್ದಾನೆ. ಸದ್ಯದ ಮಾಹಿತಿ ಪ್ರಕಾರ, ಈತ ಯಾರೋ ಪ್ರಭಾವಿಗಳ ಸೂಚನೆ ಮೇರೆಗೆ ಈ ಇಡೀ ಸಾಕ್ಷಿ ನಾಶದ &lsquo;ಡೀಲ್&rsquo; ಕುದುರಿಸಲು ಮುಂದಾಗಿದ್ದ ಎನ್ನಲಾಗಿದೆ. 10 ದಿನಗಳ ಈ ಸುದೀರ್ಘ ವಿಚಾರಣೆಯಲ್ಲಿ ಪುನೀತ್ ಅಸಲಿ ಸತ್ಯವನ್ನು ಬಾಯಿ ಬಿಟ್ಟರೆ, ಈ ಡೀಲ್ ಕುದುರಿಸಲು ಹಣದ ಆಮಿಷ ಒಡ್ಡಿದ ದೊಡ್ಡ ವ್ಯಕ್ತಿಗಳಿಗೆ ನೇರ ಸಂಕಷ್ಟ ಅಂತು ಕಟ್ಟಿಟ್ಟ ಬುತ್ತಿ.&lt;/p&gt;&lt;h2&gt;ಕಾನ್ಫರೆನ್ಸ್ ಕಾಲ್ ರಹಸ್ಯ ಬಿಚ್ಚಿಡಲಿದೆ ಎಫ್&zwnj;ಎಸ್&zwnj;ಎಲ್ (FSL) ವರದಿ&lt;/h2&gt;&lt;p&gt;ಸಾಕ್ಷಿಗೆ ಬೆದರಿಕೆ ಹಾಕಲು ಆರೋಪಿಗಳು ಬಳಸಿದ್ದ ಮೊಬೈಲ್ ಫೋನ್&zwnj;ಗಳನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮೊಬೈಲ್&zwnj;ನಿಂದ ಡಿಲೀಟ್ ಮಾಡಲಾಗಿರುವ ಕರೆಗಳ ವಿವರ, ವಾಟ್ಸಾಪ್ ಚಾಟ್&zwnj;ಗಳು ಮತ್ತು ಪ್ರಮುಖ ಆಡಿಯೋ ರೆಕಾರ್ಡಿಂಗ್&zwnj;ಗಳನ್ನು ಮರುಪಡೆಯುವ (Retrieve) ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಂಪೂರ್ಣ ವರದಿ ಪೊಲೀಸರ ಕೈಸೇರಲಿದೆ. ಸಾಕ್ಷಿಗೆ ಬೆದರಿಕೆ ಹಾಕುವ ಸಮಯದಲ್ಲಿ ಈ ಆರೋಪಿಗಳ ಜೊತೆ ಕಾನ್ಫರೆನ್ಸ್ ಕಾಲ್&zwnj;ನಲ್ಲಿ ಇನ್ನು ಯಾರ್ಯಾರು ಸಂಪರ್ಕದಲ್ಲಿದ್ದರು? ಬೆಂಗಳೂರಿನಿಂದ ಯಾರಾದರೂ ಇವರಿಗೆ ಇನ್ಸ್ಟ್ರಕ್ಷನ್ ನೀಡುತ್ತಿದ್ದರೇ? ಎಂಬುದನ್ನು ಎಫ್&zwnj;ಎಸ್&zwnj;ಎಲ್ ಪತ್ತೆ ಹಚ್ಚಲಿದೆ.&lt;/p&gt;&lt;h2&gt;ಡೀಲ್ ಕುದುರಿಸಿದವರಿಗೆ ಶುರುವಾಗಿದೆ ನಡುಕ!&lt;/h2&gt;&lt;p&gt;ಎಫ್&zwnj;ಎಸ್&zwnj;ಎಲ್&zwnj;ನಿಂದ ತಾಂತ್ರಿಕ ಸಾಕ್ಷ್ಯಗಳು ಕೈ ಸೇರಿದ ತಕ್ಷಣವೇ, ಈ ಇಡೀ ಸಾಕ್ಷಿ ಬೆದರಿಕೆ ಪ್ರಕರಣದ ಹಿಂದೆ ನಿಂತು ಹಣದ ಹರಿವು ಹಾಗೂ ತಂತ್ರ ರೂಪಿಸಿದ ದೊಡ್ಡ ತಲೆಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಲಿದ್ದಾರೆ. ನೋಟಿಸ್ ನೀಡಿದ ಬಳಿಕ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಮುಖಾಮುಖಿ ವಿಚಾರಣೆ ನಡೆಸಲು ಕಾಮಾಕ್ಷಿಪಾಳ್ಯ ಪೊಲೀಸರು ಯೋಜನೆ ರೂಪಿಸಿದ್ದಾರೆ.&lt;/p&gt;&lt;p&gt;ದರ್ಶನ್ ರಕ್ಷಣೆಗಾಗಿ ಕೋಟಿ ಕೋಟಿ ಹಣ ಹಿಡಿದು ಡೀಲ್ ಮಾಡಲು ಹೊರಟಿದ್ದ ಪ್ರಭಾವಿ ವಲಯದಲ್ಲಿ ಈಗ ತೀವ್ರ ನಡುಕ ಮತ್ತು ಆತಂಕ ಮನೆಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್&zwnj;ನ ಸೈಡ್ ಟ್ರ್ಯಾಕ್&zwnj;ನಲ್ಲಿ ಆರಂಭವಾಗಿರುವ ಈ ಬೆದರಿಕೆ ಪ್ರಕರಣ, ಅಸಲಿ ಕೊಲೆ ಪ್ರಕರಣಕ್ಕಿಂತಲೂ ದೊಡ್ಡ ತಿರುವು ಪಡೆಯುವ ಮುನ್ಸೂಚನೆ ಸಿಗುತ್ತಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz"/>
        </item>
        <item>
            <title><![CDATA[ಭದ್ರಾಮೇಲ್ದಂಡೆ ಯೋಜನೆಯಿಂದ 37 ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆ ಘೋಷಿಸಿದ ಶಾಸಕ]]></title>
            <link>https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx</link>
            <guid isPermaLink="true">https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx</guid>
            <pubDate>Sat, 06 Jun 2026 07:34:46 +0530</pubDate>
            <description><![CDATA[ಶಾಸಕ ಡಾ.ಎಂ.ಚಂದ್ರಪ್ಪ ಅವರು ಭದ್ರಾಮೇಲ್ದಂಡೆ ಯೋಜನೆಯಡಿ ಹೊಳಲ್ಕೆರೆ ತಾಲೂಕಿನ 37 ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯನ್ನು ಘೋಷಿಸಿದ್ದಾರೆ. ಇದರೊಂದಿಗೆ, ದೊಗ್ಗನಾಳ್ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು, ತಾಲೂಕಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಯ ಬಗ್ಗೆಯೂ ಮಾಹಿತಿ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01ktdar970gm141v7qrpnz67p4,imgname-holalkere-1780711433440.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಭದ್ರಾಮೇಲ್ದಂಡೆ ಯೋಜನೆಯಿಂದ ನೀರು ತಂದು ತಾಲೂಕಿನಲ್ಲಿರುವ 37 ಕೆರೆಗಳನ್ನು ತುಂಬಿಸುವ ದೊಡ್ಡ ಯೋಜನೆ ಕೈಗೆತ್ತಿಕೊಂಡಿದ್ದೇನೆ. ಇದರಿಂದ ಎಲ್ಲಾ ಕೆರೆಗಳು ತುಂಬಿ ಸಮಗ್ರ ನೀರಾವರಿಯಾಗಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.&lt;/p&gt;&lt;p&gt;ದೊಗ್ಗನಾಳ್ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದಲ್ಲಿ ದೊಗ್ಗನಾಳ್ ಗ್ರಾಮದಿಂದ ಆರ್.ನುಲೇನೂರುವರೆಗೂ ನೂತನ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;h2&gt;&lt;strong&gt;ಭದ್ರಾ ಮೇಲ್ದಂಡೆ ಯೋಜನೆಗಾಗಿ ಹೋರಾಟ&lt;/strong&gt;&lt;/h2&gt;&lt;p&gt;ಹತ್ತಾರು ವರ್ಷಗಳ ಕಾಲ ಸಾಕಿ ಸಲಹಿದೆ ಅಡಿಕೆ ಮರ ಒಣಗಿದರೆ ರೈತರಿಗೆ ಎಷ್ಟು ನೋವಾಗುತ್ತದೆನ್ನುವುದನ್ನು ಅರ್ಥಮಾಡಿಕೊಂಡಿದ್ದೇನೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಕಾಲದಿಂದಲೂ ಭದ್ರಾ ಮೇಲ್ದಂಡೆ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರೆಸಿ ಗುದ್ದಲಿ ಪೂಜೆ ಮಾಡಿಸಿದ್ದೆ. ಆಗ 5300 ಕೋಟಿ ರು. ಗಳನ್ನು ನೀರಾವರಿ ಯೋಜನೆಗೆ ಖರ್ಚು ಮಾಡಬೇಕಿತ್ತು. ಈಗ 23 ಸಾವಿರ ಕೋಟಿ ರು.ಗಳಷ್ಟಾಗಿದೆ. ವರ್ಷದಿಂದ ವರ್ಷಕ್ಕೆ ಯೋಜನೆಯ ವೆಚ್ಚ ಜಾಸ್ತಿಯಾಗುತ್ತಿದೆ ಎಂದು ಹೇಳಿದರು.&lt;/p&gt;&lt;p&gt;ಕೆರೆಗೆ ಕಾಂಕ್ರಿಟ್ ವಾಲ್ ಹಾಕಿಸಿ ಏರಿ ರಿಪೇರಿಗಾಗಿ 2 ಕೋಟಿ ರು.ಗಳನ್ನು ಮಂಜೂರು ಮಾಡಿದ್ದೇನೆ. ಮೊದಲು ಅಭಿವೃದ್ಧಿಪಡಿಸಿ ನಂತರ ನೀರು ತುಂಬಿಸಲಾಗುವುದು.&lt;/p&gt;&lt;h3&gt;&lt;strong&gt;ವಾಣಿವಿಲಾಸ ಸಾಗರದಿಂದ ಶುದ್ಧ ಕುಡಿಯುವ ನೀರು&lt;/strong&gt;&lt;/h3&gt;&lt;p&gt;ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ತಾಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಹಿರಿಯೂರಿನ ವಾಣಿವಿಲಾಸ ಸಾಗರದಿಂದ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಅದಕ್ಕಾಗಿ 367 ಕೋಟಿ ರು. ಖರ್ಚು ಮಾಡಲಾಗಿದೆ. ರೈತರ ತೋಟಗಳು ಒಣಗಬಾರದೆಂದು 17 ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಬದ್ಧತೆ ಜವಾಬ್ದಾರಿಯಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಅಧಿಕಾರ ಇರುವಾಗ ಹತ್ತಾರು ಜನಕ್ಕೆ ಒಳ್ಳೆಯದು ಮಾಡಬೇಕೆಂಬುದು ನನ್ನ ಆಸೆ ಎಂದರು.&lt;/p&gt;&lt;p&gt;ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಣ್ಣ, ಜಿಪಂ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್, ತಿಪ್ಪೇಸ್ವಾಮಿ, ಅಜ್ಜಯ್ಯ, ನುಲೇನೂರು ಶೇಖರ್, ಪ್ರವೀಣ್ ರಮೇಶ್, ರಾಜಶೇಖರ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/holalkere-mla-dr-m-chandrappa-announces-massive-project-to-fill-37-lakes-through-bhadra-upper-bank-project-mrq/articleshow-90ihitx"/>
        </item>
        <item>
            <title><![CDATA[ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ರಮ್ಯಾ.ಎಸ್ ವರ್ಗಾವಣೆ; ಕೆಲವೇ ಗಂಟೆಗಳಲ್ಲಿ ಆದೇಶ ವಾಪಸ್ ಪಡೆದ ಸರ್ಕಾರ!]]></title>
            <link>https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti</link>
            <guid isPermaLink="true">https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti</guid>
            <pubDate>Fri, 03 Jul 2026 20:40:20 +0530</pubDate>
            <description><![CDATA[&lt;p&gt;ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಎಸ್. ರಮ್ಯಾ ಅವರ ವರ್ಗಾವಣೆ ಆದೇಶವನ್ನು ಕೆಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಇದೀಗ ವರ್ಗಾವಣೆ ಹಿಂಪಡೆಯಲಾಗಿದ್ದು, ಟಿ. ವೆಂಕಟೇಶ್ ಅವರೇ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwm8exwmnn84nd9j6r6hkn9a,imgname-chitradurga-dc-venkatesh-and-ramya-s-transfer-1783091394452.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜು.03): ಕ&lt;/strong&gt;ರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಎಸ್. ರಮ್ಯಾ (Ramya S) ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ(Chitradurga DC) ವರ್ಗಾವಣೆ ಮಾಡಿದ ಕೆಲವೇ ಗಂಟೆಗಳಲ್ಲಿರಾಜ್ಯ ಸರ್ಕಾರ ಟ್ರಾನ್ಸ್&zwnj;ಫರ್ ರದ್ದುಗೊಳಿಸಿ (Order Cancelled) ಆದೇಶವನ್ನು ವಾಪಸ್ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಅವರು ಕವಿಕಾ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಮುಂದುವರೆಯಲಿದ್ದಾರೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಜುಲೈ 3ರಂದು ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ರಮ್ಯ ಎಸ್. (IAS: 2013) ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆ (Notification) ಹೊರಡಿಸಲಾಗಿತ್ತು.&lt;/p&gt;&lt;h2&gt;&lt;strong&gt;ಆದೇಶ ರದ್ದಾಗಲು ಕಾರಣವೇನು?&lt;/strong&gt;&lt;/h2&gt;&lt;p&gt;ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮತ್ತೊಂದು ಪತ್ರ ಹೊರಬಿದ್ದಿದೆ. ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision - SSR) ಕಾರ್ಯ ಜಾರಿಯಲ್ಲಿದೆ. ಭಾರತ ಚುನಾವಣಾ ಆಯೋಗದ (Election Commission of India) ಕಟ್ಟುನಿಟ್ಟಿನ ನಿರ್ದೇಶನದಂತೆ, ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ನಡೆಯುತ್ತಿರುವಾಗ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು (ಜಿಲ್ಲಾ ಚುನಾವಣಾಧಿಕಾರಿಗಳು) ಆಯೋಗದ ಪೂರ್ವ ಅನುಮತಿ ಇಲ್ಲದೆ ವರ್ಗಾವಣೆ ಮಾಡುವಂತಿಲ್ಲ.&lt;/p&gt;&lt;p&gt;ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಭಾರತ ಚುನಾವಣಾ ಆಯೋಗದ ಸಹಮತಿ (Concurrence) ಪಡೆದಿರಲಿಲ್ಲ. ಇದು ಆಯೋಗದ ನಿಯಮಗಳ ನೇರ ಉಲ್ಲಂಘನೆಯಾದ ಕಾರಣ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಈ ಹಿನ್ನೆಲೆಯಲ್ಲಿ, ಸರ್ಕಾರವು ತನ್ನ ವರ್ಗಾವಣೆ ಆದೇಶವನ್ನು ಹಿಂಪಡೆದಿದೆ.&lt;/p&gt;&lt;h2&gt;&lt;strong&gt;ಪರಿಣಾಮವೇನು?&lt;/strong&gt;&lt;/h2&gt;&lt;p&gt;ಈ ದಿಢೀರ್ ಬೆಳವಣಿಗೆಯಿಂದಾಗಿ ಟಿ. ವೆಂಕಟೇಶ್ ಅವರೇ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ. ರಮ್ಯ ಎಸ್. ಅವರಿಗೆ ಅಧಿಕಾರ ವಹಿಸಿಕೊಡದಂತೆ (Relieving) ಸರ್ಕಾರ ಸೂಚನೆ ನೀಡಿದೆ. ಆಡಳಿತಾತ್ಮಕವಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ನಡೆದ ಈ ಎಡವಟ್ಟು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗದ ನಿಯಮಗಳನ್ನು ಗಮನಿಸದೆಯೇ ಸರ್ಕಾರ ಈ ನಿರ್ಧಾರ ಕೈಗೊಂಡಿತೇ ಎಂಬ ಪ್ರಶ್ನೆಗಳು ಎದ್ದಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti"/>
        </item>
        <item>
            <title><![CDATA[MLC ಮಾಡುವಂತೆ ಯಾರನ್ನೂ ಕೋರಿಲ್ಲ, ನಿಷ್ಠಾವಂತರಿಗೆ ಅವಕಾಶ ನೀಡಿ: ಎಚ್.ಆಂಜನೇಯ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e</link>
            <guid isPermaLink="true">https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e</guid>
            <pubDate>Mon, 15 Jun 2026 23:28:09 +0530</pubDate>
            <description><![CDATA[&lt;p&gt;Congress Karnataka: ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k0zehg6269zvhnhb7ch7tck4,imgname-fbf-1753402097858.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜೂ.15):&lt;/strong&gt; ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಯಾರಲ್ಲೂ ಕೋರಿಲ್ಲ. ಪಕ್ಷದ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ಬೇಡಿಕೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ.ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ನಮ್ಮನ್ನು ಕಡೆಗಣಿಸಿಲ್ಲ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ಮುಂದುವರಿಸುತ್ತೇನೆ ಎಂದರು.&lt;/p&gt;&lt;p&gt;ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್&zwj;ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ಸಾಕ್ಷೀಕರಿಸಲು ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಸಕಲ ವ್ಯವಸ್ಧೆ ಮಾಡಿಕೊಳ್ಳಲಾಗಿದೆ ಎಂದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.&lt;/p&gt;&lt;p&gt;ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್&zwj;ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್&zwj;ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು.&lt;/p&gt;&lt;p&gt;ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಆಂಜನೇಯಮನವಿ ಮಾಡಿದರು.&lt;/p&gt;&lt;h2&gt;&lt;strong&gt;ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ&lt;/strong&gt;&lt;/h2&gt;&lt;p&gt;ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಕೆಲ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/h-anjaneya-on-mlc-seat-congress-loyal-workers-bk-hariprasad-gvd/articleshow-9in9l3e"/>
        </item>
        <item>
            <title><![CDATA[ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಯುವಕನಿಂದ ಹಲ್ಲೆ, ಪೊಲೀಸ್ ಠಾಣೆಯಲ್ಲೂ ಶ್ರೀಗಳ ಎದೆಗೆ ಒದ್ದು ದಾಂಧಲೆ!]]></title>
            <link>https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp</link>
            <guid isPermaLink="true">https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp</guid>
            <pubDate>Mon, 06 Jul 2026 08:00:23 +0530</pubDate>
            <description><![CDATA[ಚಿತ್ರದುರ್ಗದ ಐಮಂಗಲದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಹರಳಯ್ಯ ಮಠದ ಸ್ವಾಮೀಜಿ ಮೇಲೆ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿದ್ದಾರೆ. ಬಳಿಕ, ದೂರು ನೀಡಲು ಹೋದ ಸ್ವಾಮೀಜಿಯನ್ನು ಪೊಲೀಸ್ ಠಾಣೆಯೊಳಗೆ ಬೆನ್ನಟ್ಟಿ ಅಲ್ಲೂ ದೌರ್ಜನ್ಯ ಎಸಗಿದ್ದು, ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtm4haw1dwp9vb61fctpgjd,imgname-chitradurga-haralayya-swamiji-1783304963419.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಶಿವಶರಣ ಹರಳಯ್ಯ ಮಠಕ್ಕೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳ ತಂಡವೊಂದು, ಮಠದ ಪೀಠಾಧಿಪತಿಗಳಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಹಾಗೂ ಶಾಲಾ ಬಸ್ ಚಾಲಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಠಾಣೆಗೆ ಹೋದ ಸ್ವಾಮೀಜಿಯನ್ನು ಬೆನ್ನಟ್ಟಿ ಪೊಲೀಸ್ ಠಾಣೆಯ ಒಳಗೇ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;ಮಠದ ಪ್ರವೇಶ ದ್ವಾರದ ಜಾಗಕ್ಕೆ ಸಂಬಂಧಿಸಿದಂತೆ ಹರಳಯ್ಯ ಶ್ರೀಗಳು ಹಾಗೂ ಸ್ಥಳೀಯ ನಿವಾಸಿ ಸಿದ್ದೇಶ್ವರ್ ಕುಟುಂಬದ ನಡುವೆ ಕಳೆದ ಕೆಲವು ಸಮಯದಿಂದ ತೀವ್ರ ವ್ಯಾಜ್ಯವಿದೆ. ಸದ್ಯ ಈ ಜಾಗದ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿದಿದೆ. ಪ್ರಕರಣ ನ್ಯಾಯಾಲಯದ ಹಂತದಲ್ಲಿದ್ದರೂ ಸಹ, ಸಿದ್ದೇಶ್ವರ್ ಮತ್ತು ಆತನ ಕಡೆಯವರು ಪದೇಪದೇ ದಬ್ಬಾಳಿಕೆ ನಡೆಸುತ್ತಿದ್ದರು. ಕೆಲವು ತಿಂಗಳುಗಳ ಹಿಂದೆಯೂ ಮಠದ ಪ್ರವೇಶ ದ್ವಾರಕ್ಕೆ ಬೇಲಿ ಹಾಕಿ ದರ್ಪ ತೋರಲಾಗಿತ್ತು ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;ರಾತ್ರಿ ನಡೆದಿದ್ದೇನು?&lt;/h2&gt;&lt;p&gt;ನಿನ್ನೆ ರಾತ್ರಿ ಸಿದ್ದೇಶ್ವರ ಮತ್ತು ಇತರರು ಮಠದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಮಠದ ಜಾಗದ ವಿಚಾರವಾಗಿ ಗಲಾಟೆ ಆರಂಭಿಸಿ, ಜಾತಿನಿಂದನೆ ಮಾಡುತ್ತಾ ಹರಳಯ್ಯ ಶ್ರೀಗಳ ಮೇಲೆ ಒದ್ದು, ತಿವಿದು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶ್ರೀಗಳ ಮೂಗು ಮತ್ತು ಬಾಯಿಯಲ್ಲಿ ರಕ್ತ ಬಂದಿದೆ. ಶ್ರೀಗಳ ರಕ್ಷಣೆಗೆ ಬಂದ ಮಠದ ಶಾಲಾ ಬಸ್ ಚಾಲಕ ಭೀಮರಾಜ್ ಎಂಬುವವರ ಮೇಲೂ ದುಷ್ಕರ್ಮಿಗಳು ನಿರ್ದಕ್ಷಿಣ್ಯವಾಗಿ ಹಲ್ಲೆ ನಡೆಸಿದ್ದಾರೆ. &quot;ನಿನ್ನನ್ನು ಕೊಂದೇ ನಾನು ಸಾಯುತ್ತೇನೆ&quot; ಎಂದು ಸಿದ್ದೇಶ್ವರ್ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;ಪೊಲೀಸ್ ಠಾಣೆಯಲ್ಲೇ ರೌಡಿಸಂ!&lt;/h2&gt;&lt;p&gt;ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಹರಳಯ್ಯ ಶ್ರೀಗಳು ತಕ್ಷಣವೇ ರಕ್ಷಣೆ ಕೋರಿ ಹಾಗೂ ದೂರು ನೀಡಲು ಐಮಂಗಲ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆದರೆ, ಆರೋಪಿಗಳು ಕಾನೂನಿಗೂ ಹೆದರದೆ ಶ್ರೀಗಳನ್ನು ಬೆನ್ನಟ್ಟಿಕೊಂಡು ಪೊಲೀಸ್ ಠಾಣೆಯ ಒಳಗೇ ನುಗ್ಗಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಶ್ರೀಗಳ ಎದೆಗೆ ಒದ್ದು ದೌರ್ಜನ್ಯ ಎಸಗಿದ್ದಲ್ಲದೆ, ಠಾಣೆಯಲ್ಲಿದ್ದ ಕುರ್ಚಿಗಳನ್ನು ಮುರಿದು ಹಾಕಿದ್ದಾರೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ಹರಳಯ್ಯ ಶ್ರೀಗಳು ಹಾಗೂ ಬಸ್ ಚಾಲಕ ಭೀಮರಾಜ್ ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಐಮಂಗಲ ಠಾಣೆಯ ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;ಜಿಲ್ಲಾಸ್ಪತ್ರೆಯಲ್ಲಿ ಹರಳಯ್ಯ ಶ್ರೀಗಳ ಆಕ್ರೋಶದ ನುಡಿಗಳು:&lt;/h2&gt;&lt;p&gt;ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರಳಯ್ಯ ಶ್ರೀಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸ್ಥಳೀಯ ಪೊಲೀಸ್ ವ್ಯವಸ್ಥೆಯ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. &quot;ಮಠದ ಜಾಗದ ವಿವಾದ ನ್ಯಾಯಾಲಯದಲ್ಲಿದೆ. ಹೀಗಿದ್ದರೂ ಸಿದ್ದೇಶ್ವರ್ ಯಾರದ್ದೋ ಕುಮ್ಮಕ್ಕಿನಿಂದ ಪದೇಪದೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾನೆ. ಕೆಲವು ತಿಂಗಳ ಹಿಂದೆ ಮಠದ ದ್ವಾರಕ್ಕೆ ಬೇಲಿ ಹಾಕಿದಾಗ ದೂರು ನೀಡಲು ಹೋದರೂ ಪೊಲೀಸರು ದೂರನ್ನು ಸ್ವೀಕರಿಸದೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪೊಲೀಸರ ನಿರ್ಲಕ್ಷ್ಯವೇ ಇಷ್ಟೆಲ್ಲಾ ನಡೆಯಲು ಕಾರಣ. ಐಮಂಗಲ ಠಾಣೆಯ ಒಳಗೇ ನುಗ್ಗಿ ನನ್ನ ಮೇಲೆ ಒದ್ದು, ಕುರ್ಚಿ ಮುರಿದು ದರ್ಪ ತೋರಿದ್ದಾರೆ ಎಂದರೆ ಇಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ? ತಕ್ಷಣವೇ ಐಮಂಗಲ ಠಾಣೆಯ ಮಹಿಳಾ ಪಿಎಸ್&zwnj;ಐ (PSI) ಅವರನ್ನು ಅಮಾನತುಗೊಳಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು,&quot; ಎಂದು ಶ್ರೀಗಳು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp"/>
        </item>
        <item>
            <title><![CDATA['ನನ್ನನ್ನ ಭಾವಿ ಸಿಎಂ ಅಂತಾ ಕರೆಯೋದೇ ನನಗೆ ಸಮಸ್ಯೆ..: ವಿಜಯೇಂದ್ರ ಹೇಳಿಕೆ ವೈರಲ್]]></title>
            <link>https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy</link>
            <guid isPermaLink="true">https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy</guid>
            <pubDate>Thu, 09 Jul 2026 06:03:47 +0530</pubDate>
            <description><![CDATA[&lt;p&gt;ಲವರು ನನ್ನನ್ನು ಭಾವಿ ಮುಖ್ಯಮಂತ್ರಿ ಅಂತ ಕರೆಯುತ್ತಿರುವುದೇ ನನಗೆ ಸಮಸ್ಯೆಯಾಗಿದೆ. ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯವಲ್ಲ, ಮುಖಂಡರು ಜನರಿಗೆ ಹತ್ತಿರವಾದಾಗ ಮಾತ್ರ ಜನರು ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wp2b5v03z6v8krfh3yrqaf,imgname-gnghmn-1757604293819.png" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಮುಂದೆ ಯಾರು ಸಿಎಂ ಆಗ್ತಾರೆ ಮುಖ್ಯವಲ್ಲ&lt;/li&gt; &lt;li&gt;&amp;nbsp;ಮುಖಂಡರು ಜನರಿಗೆ ಹತ್ತಿರವಾಗುವು ಮುಖ್ಯ&lt;/li&gt;&lt;/ul&gt;&lt;p&gt;&lt;strong&gt;ಚಿತ್ರದುರ್ಗ (ಜು.9): &lt;/strong&gt;ಕೆಲವರು ನನ್ನನ್ನು ಭಾವಿ ಮುಖ್ಯಮಂತ್ರಿ ಅಂತ ಕರೆಯುತ್ತಿರುವುದೇ ನನಗೆ ಸಮಸ್ಯೆಯಾಗಿದೆ. ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯವಲ್ಲ, ಮುಖಂಡರು ಜನರಿಗೆ ಹತ್ತಿರವಾದಾಗ ಮಾತ್ರ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.&lt;/p&gt;&lt;h2&gt;ಮುಂದೆ ಯಾರು ಸಿಎಂ ಅನ್ನೋದು ಮುಖ್ಯ ಅಲ್ಲ: ವಿಜಯೇಂದ್ರ&lt;/h2&gt;&lt;p&gt;ನಗರದಲ್ಲಿ ಬುಧವಾರ ನಡೆದ ವಿಧಾನ ಪರಿಷತ್&zwnj; ಚುನಾವಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ತಮ್ಮ ಭಾಷಣದಲ್ಲಿ ಭಾವಿ ಸಿಎಂ ವಿಜಯೇಂದ್ರ ಎಂದು ಉಲ್ಲೇಖಿಸಿದರು. ಈ ಸಂಗತಿಯನ್ನು ಆ ಬಳಿಕ ಮಾತನಾಡಿದ ವಿಜಯೇಂದ್ರ ಅವರು ಪ್ರಸ್ತಾಪಿಸಿ, &lsquo;ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯ ಅಲ್ಲ. ಮತದಾರರಿಗೆ ನಮ್ಮ ಮೇಲೆ ವಿಶ್ವಾಸ ಮೂಡುವಂತಹ ಕೆಲಸದ ಕಡೆ ಗಮನ ಹರಿಸಬೇಕು. ಕಾರ್ಯಕರ್ತರು ಹಾಗೂ ಮುಖಂಡರು ಜನರಿಗೆ ಹತ್ತಿರ ಆಗಬೇಕು. ಆಗ ಮಾತ್ರ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ. ಪಕ್ಷ ಅಧಿಕಾರಕ್ಕೆ ಬಂದ ಮೇಲಷ್ಟೆ ಉಳಿದವು ಚರ್ಚೆಯಾಗುತ್ತವೆ&rsquo; ಎಂದು ಹೇಳಿದರು.&lt;/p&gt;&lt;h3&gt;ವಿಧಾನ ಪರಿಷತ್ ಈಗ ಹಣವಂತರ ಚಾವಡಿಯಾಗಿದೆ&lt;/h3&gt;&lt;p&gt;ಈ ಹಿಂದೆ ವಿಧಾನ ಪರಿಷತ್&zwnj;ಗೆ ಚುನಾವಣೆ ನಡೆದಾಗ ವಾಗ್ಮಿಗಳು, ಚಿಂತಕರು, ಸಮಾಜ ಸೇವಕರು ಪ್ರವೇಶ ಮಾಡುತ್ತಿದ್ದರು. ಈಗ ಅದು ಹಣವಂತರ ಚಾವಡಿಯಾಗಿದೆ. ವಿಧಾನ ಸಭೆಯಲ್ಲಿ ಶಾಸಕರು ಮಾಡಿದ ಕಾನೂನು, ನಿರ್ಣಯಗಳನ್ನು ವಿಧಾನ ಪರಿಷತ್&zwj;ಗೆ ಕಳುಹಿಸಲಾಗುತ್ತದೆ. ಅದನ್ನು ಅವರು ಸರಿಯಾಗಿ ಇದೆಯೇ ಅಥವಾ ಇಲ್ಲವೋ ಎಂದು ಪರಿಶೀಲಿಸುತ್ತಿದ್ದರು. ಇದು ರಾಜ್ಯಕ್ಕೆ ಅಗತ್ಯವೇ ಎಂದು ಚರ್ಚೆಯನ್ನು ಮಾಡುವುದರ ಮೂಲಕ ಪಾಸಾಗುತ್ತಿತ್ತು. ಆದರೆ, ಈಗ ಚರ್ಚೆಯ ಸ್ವರೂಪ ಬದಲಾಗಿದೆ. ವಿಧಾನ ಪರಿಷತ್ ಎಂದರೆ ಹಣವಂತರ ಚಾವಡಿಯಾಗಿದೆ. ಹಣ ಇದ್ದವರು ಇಲ್ಲಿಗೆ ಬಂದು ತಮ್ಮ ವ್ಯವಹಾರವನ್ನು ಉಳಿಸಿಕೊಳ್ಳಲು ಅಧಿಕಾರ ಬಳಸಿಕೊಳ್ಳುತ್ತಿದ್ದಾರೆ ಎಂದರು.&lt;/p&gt;&lt;p&gt;&lt;strong&gt;ಆಗ್ನೇಯ ಕ್ಷೇತ್ರದಲ್ಲಿ 8 ಬಾರಿ ಗೆಲುವು:&lt;/strong&gt;&lt;/p&gt;&lt;p&gt;ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜನಸಂಘ ಹಾಗೂ ಬಿಜೆಪಿ 8 ಬಾರಿ ಗೆಲುವನ್ನು ಸಾಧಿಸಿದೆ. ವಿಧಾನ ಪರಿಷತ್&zwj;ನಲ್ಲಿ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಬುದ್ಧಿವಂತರು ಇರಬೇಕಾಗಿದೆ. ಬಿಜೆಪಿ ತನ್ನ ಕಾರ್ಯಕರ್ತ ಕೆ.ಎಂ.ಸುರೇಶ್&zwj; ಅವರನ್ನು ಅಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ಚುನಾವಣೆ 5 ಜಿಲ್ಲೆಯ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೂ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಜಯವನ್ನು ಸಾಧಿಸಿದೆ ಎಂದರು.&lt;/p&gt;&lt;p&gt;ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಚುನಾವಣೆಗೆ ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೊರಲಾಗಿದ್ದು, ಅವರಿಂದ ಪೂರಕ ಪ್ರತಿಕ್ರಿಯೆ ಬಂದಿದೆ. ನಮ್ಮ ಪಕ್ಷದ ಕಾರ್ಯಕರ್ತರು ಮುಂದಿನ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಇದಕ್ಕೂ ಮುನ್ನ ಪಕ್ಷದ ನಾಯಕರ ಮೇಲೆ ವಿಶ್ವಾಸ, ನಂಬಿಕೆ ಇಡಬೇಕಿದೆ ಎಂದು ಹೇಳಿದರು.&lt;/p&gt;&lt;p&gt;ಶಾಸಕರಾದ ಡಾ.ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಶಿವಯೋಗಿಸ್ವಾಮಿ ಇದ್ದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy"/>
        </item>
        <item>
            <title><![CDATA[Renukaswamy Family: ನಟ ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೀಡಾದ ರೇಣುಕಾಸ್ವಾಮಿ ಕುಟುಂಬದಲ್ಲಿ ಮತ್ತೊಂದು ಸೂತಕ!]]></title>
            <link>https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9</link>
            <guid isPermaLink="true">https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9</guid>
            <pubDate>Wed, 17 Jun 2026 17:31:07 +0530</pubDate>
            <description><![CDATA[&lt;p&gt;ನಟ ದರ್ಶನ್ ಗ್ಯಾಂಗ್&zwnj;ನಿಂದ (Darshan Gang) ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಕುಟುಂಬದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೊಮ್ಮಗನ ಸಾವಿನ ನೋವಿನಿಂದ ಬಳಲುತ್ತಿದ್ದ ಶತಾಯುಷಿ ಅಜ್ಜಿ ಪ್ರಮೀಳಾದೇವಿ (100) ವಿಧಿವಶರಾಗಿದ್ದಾರೆ. ಈಗಾಗಲೇ ದುಃಖದಲ್ಲಿರುವ ಕುಟುಂಬದಲ್ಲಿ ಮತ್ತೆ ಶೋಕ ಆವರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvapze4n37mbnqh8cqynkt9c,imgname-renukaswamy-grand-mother-death-1781697329301.jpg" type="image/jpeg" height="390" width="690"/>
            <content:encoded><![CDATA[&lt;p&gt;ನಟ ದರ್ಶನ್ ಗ್ಯಾಂಗ್&zwnj;ನಿಂದ (Darshan Gang) ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಕುಟುಂಬದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೊಮ್ಮಗನ ಸಾವಿನ ನೋವಿನಿಂದ ಬಳಲುತ್ತಿದ್ದ ಶತಾಯುಷಿ ಅಜ್ಜಿ ಪ್ರಮೀಳಾದೇವಿ (100) ವಿಧಿವಶರಾಗಿದ್ದಾರೆ. ಈಗಾಗಲೇ ದುಃಖದಲ್ಲಿರುವ ಕುಟುಂಬದಲ್ಲಿ ಮತ್ತೆ ಶೋಕ ಆವರಿಸಿದೆ.&lt;/p&gt;&lt;img&gt;&lt;p&gt;&lt;strong&gt;ಚಿತ್ರದುರ್ಗ (ಜೂ.17): ನ&lt;/strong&gt;ಟ ದರ್ಶನ್ ಮತ್ತು ಗ್ಯಾಂಗ್&zwnj;ನಿಂದ ಬರ್ಬರವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬದಲ್ಲಿ ಮತ್ತೊಂದು ಶೋಕದ ಛಾಯೆ ಆವರಿಸಿದೆ. ರೇಣುಕಾಸ್ವಾಮಿ ಅವರ ಅಜ್ಜಿ, ಶತಾಯುಷಿ ಪ್ರಮೀಳಾದೇವಿ (100) ಅವರು ಇಂದು ವಿಧಿವಶರಾಗಿದ್ದಾರೆ. ಮೊಮ್ಮಗನ ಅಕಾಲಿಕ ಹಾಗೂ ಕ್ರೂರ ಸಾವಿನ ನೋವಿನಿಂದ ಅವರು ತೀವ್ರವಾಗಿ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಗಾಯದ ಮೇಲೆ ಬರೆ:&lt;/strong&gt;&lt;/p&gt;&lt;p&gt;ರೇಣುಕಾಸ್ವಾಮಿ ಕೊಲೆಯಾದ ನಂತರ ಆತನ ತಂದೆ-ತಾಯಿ ಮತ್ತು ಪತ್ನಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಈ ಮಧ್ಯೆ ಮನೆಯ ಹಿರಿಯ ಜೀವವಾಗಿದ್ದ ಪ್ರಮೀಳಾದೇವಿಯವರು ವಯೋಸಹಜ ಅನಾರೋಗ್ಯದ ಜೊತೆಗೆ ಮೊಮ್ಮಗನ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದರು. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ಅಂತಿಮ ಸಂಸ್ಕಾರದ ವಿವರ:&lt;/p&gt;&lt;p&gt;ಪ್ರಮೀಳಾದೇವಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಚಿತ್ರದುರ್ಗದ ಅವರ ನಿವಾಸದ ಬಳಿ ಇಂದು ಮಧ್ಯಾಹ್ನ 4 ಗಂಟೆಯವರೆಗೆ ಇರಿಸಲಾಗುತ್ತದೆ. ತದನಂತರ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ನೆರವೇರಲಿವೆ. ಮೃತರು ರೇಣುಕಾಸ್ವಾಮಿಯ ತಂದೆ ಶಿವನಗೌಡ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.&lt;/p&gt;&lt;img&gt;&lt;p&gt;ಒಂದೆಡೆ ಮಗನ ಸಾವಿನ ಆಘಾತದಿಂದ ಇನ್ನೂ ಹೊರಬರದ ಶಿವನಗೌಡ ಅವರಿಗೆ ಈಗ ತಾಯಿಯ ಅಗಲಿಕೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ರೇಣುಕಾಸ್ವಾಮಿ ಪ್ರಕರಣದ ಹಿನ್ನೆಲೆಯಲ್ಲಿ ಇಡೀ ಕುಟುಂಬ ಈಗಾಗಲೇ ಕುಸಿದು ಹೋಗಿದ್ದು, ಇದೀಗ ಮತ್ತೊಂದು ಸಾವು ಕುಟುಂಬವನ್ನು ಮತ್ತಷ್ಟು ಸಂಕಷ್ಟಕ್ಕೆ ಈಡುಮಾಡಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/renukaswamy-grandmother-pramiladevi-passes-away-chitradurga-darshan-case-etme6o9"/>
        </item>
        <item>
            <title><![CDATA[ಚಿಂತಾಜನಕ ಸ್ಥಿತಿಯಲ್ಲಿರೋ ಸರ್ಕಾರಿ ಶಾಲೆಗಳ ಕಪ್ಪು ಬೋರ್ಡ್‌ಗಳಿಗೆ  ಬಣ್ಣ ಬಳಿಯುವ ಅಭಿಯಾನ]]></title>
            <link>https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw</link>
            <guid isPermaLink="true">https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw</guid>
            <pubDate>Mon, 29 Jun 2026 14:26:26 +0530</pubDate>
            <description><![CDATA[&lt;p&gt;ಸರ್ಕಾರಿ ಶಾಲೆಗಳಲ್ಲಿ ಹಾಳಾಗಿದ್ದ ಕಪ್ಪು ಬೋರ್ಡ್&zwnj;ಗಳಿಗೆ ಶಿಕ್ಷಣ ಇಲಾಖೆಯು 'ನಾವು ಬಣ್ಣ ಬಳಿಯುವ ಅಭಿಯಾನ'ದ ಮೂಲಕ ಹೊಸ ಜೀವ ನೀಡುತ್ತಿದೆ. ಶಾಲಾ ಅನುದಾನ ಬಳಸಿ ಶಿಕ್ಷಕರು ಈ ನವೀಕರಣ ಕಾರ್ಯ ಕೈಗೊಂಡಿದ್ದು, ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಕಾಯಕಲ್ಪ ನೀಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw99cn5vc6v2rpjrn3r4dsrd,imgname-blackboard-1782723269819.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಡೇಕುಂಟೆ ಮಂಜುನಾಥ್&zwnj;&lt;/strong&gt;&lt;/p&gt;&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಚಳ್ಳಕೆರೆ&lt;/strong&gt;&lt;/p&gt;&lt;p&gt;ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳ ತರಗತಿ ಕೋಣೆಗಳಲ್ಲಿರುವ ಕಪ್ಪು ಬೋರ್ಡ್ ಗಳ ಸ್ಥಿತಿ ಚಿಂತಾಜನಕವಾಗಿವೆ. ಸುಮಾರು ವರ್ಷಗಳಿಂದಲೂ ಹಾಳಾಗಿರುವ ಬೋರ್ಡುಗಳ ಮೇಲೆ ಶಿಕ್ಷಕರು ಬರೆದ ಯಾವುದೇ ಬರಹ ಕಾಣಿಸದಂತಿವೆ. ಇವುಗಳಿಗೆ ಜೀವ ಹೋಗಿದ್ದು, ಮತ್ತೆ ಜೀವಕಳೆ ತುಂಬಿಸಲು ಇದೀಗ ಕಪ್ಪು ಬೋರ್ಡಿಗೆ ಬಣ್ಣ ಬಳಿಯುವ ಅಭಿಯಾನ ಶುರು ಮಾಡಿರುವ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿಯೊಂದು ಶಾಲೆಗೆ ಭೇಟಿ ನೀಡಿದಾಗಲೂ ಇಂತಹ ಅಗತ್ಯ ಸೌಲಭ್ಯದಿಂದ ಮಕ್ಕಳು ವಂಚಿತರಾಗಬಾರದು ಇಂತಹ ಬೋರ್ಡುಗಳೇ ವಿದ್ಯಾರ್ಥಿಗಳ ಕಲಿಕಾ ವಿಧಾನಕ್ಕೆ ಜೀವಾಳ ಎಂದುಕೊಂಡು ಕಾಯಕಲ್ಪ ನೀಡಲು ಮುಂದಾಗಿದ್ದಾರೆ.&lt;/p&gt;&lt;p&gt;ತರಗತಿ ಕೋಣೆಗೆ ಶಿಕ್ಷಕರಾದವರು ಬಂದಾಕ್ಷಣವೇ ಕಪ್ಪು ಬೋರ್ಡಿನ ಮೇಲೆ ದಿನಾಂಕ, ಹಾಜರಾತಿ ಸಂಖ್ಯೆ, ಒಟ್ಟು ವಿದ್ಯಾರ್ಥಿಗಳ ಸಂಖ್ಯೆ, ಪಾಠ ಶುರುಮಾಡಿದಾಗ ಪಾಠದ ಹೆಸರು, ಗಣಿತ ಕಲಿಸುವಾಗ ಲೆಕ್ಕಗಳನ್ನು ಸೂತ್ರಗಳನ್ನು ಬೋರ್ಡಿನ ಮೇಲೆ ಬರೆದಾಗ ಮಾತ್ರ ವಿದ್ಯಾರ್ಥಿಗಳಿಗೆ ಅರ್ಥ ಆಗುತ್ತವೆ.&lt;/p&gt;&lt;p&gt;ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕಪ್ಪು ಬೋರ್ಡುಗಳು ಬರೆದರೂ ಕಾಣಿಸದಷ್ಟು ಹಾಳಾಗಿ ಹೋಗಿದ್ದವು. ಇಂತಹ ಶಾಲೆಗಳಿಗೆ ಭೇಟಿ ನೀಡಿದಾಗ ಗಮನಿಸಿದ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಸಮೂಹ ಸಂಪನ್ಮೂಲ ಅಧಿಕಾರಿ ಎಚ್.ಬಿ. ಮಂಜುಬಾಬು ಯಾವ ಶಾಲೆಗಳಲ್ಲಿ ಬೋರ್ಡುಗಳು ಹಾಳಾಗಿವೆಯೋ ಅಂತಹ ಶಾಲೆಯ ಶಿಕ್ಷಕರಿಗೆ ಶಾಲಾ ಅನುದಾನವನ್ನು ಬಳಸಿಕೊಂಡು ಬೋರ್ಡುಗಳಿಗೆ ಕಾಯಕಲ್ಪ ನೀಡಿ ಎಂದು ಸೂಚಿಸಿದ್ದಾರೆ.&lt;/p&gt;&lt;p&gt;ಇಂತಹ ಸೂಚನೆಯನ್ನು ಪಾಲಿಸುತ್ತಿರುವ ತಾಲೂಕಿನ ಬಹುತೇಕ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರುಗಳು ಹಾಳಾಗಿರುವ ಬೋರ್ಡಿಗೆ ಹೊಸ ಕಾಯಕಲ್ಪ ನೀಡುತ್ತಿರುವುದು ಕಂಡು ಬರುತ್ತಿದೆ. ಕಸಬಾ ಹೋಬಳಿ ವ್ಯಾಪ್ತಿಯ ಹೆಗ್ಗೆರೆ, ಸಿದ್ದಾಪುರ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಕಪ್ಪು ಬೋರ್ಡಿಗೆ ಕಾಯಕಲ್ಪ ನೀಡುವ ಕಾಯಕ ಪ್ರಗತಿಯಲ್ಲಿದೆ.&lt;/p&gt;&lt;p&gt;ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೊಂದಲು ಮಕ್ಕಳು ಸಿಗುತ್ತಿಲ್ಲ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳ ಕಡೆಗೆ ತಲೆ ಹಾಕುತ್ತಿಲ್ಲ. ಈ ಕಾರಣಕ್ಕಾಗಿಯೇ ಜೂನ್ ತಿಂಗಳು ಬಂತೆಂದರೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಶಿಕ್ಷಕರೇ ಮನೆ ಮನೆಗೆ ತೆರಳಿ ಪೋಷಕರ ಮನವೊಲಿಸುವ ಕಡೆಗೆ ಹೆಜ್ಜೆ ಹಾಕುತ್ತಿರುವುದು ಈಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಆದರೂ ಕೆಲವು ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಜೀರೋ ದಾಖಲಾತಿ ಎಂಬಂತಾಗಿದೆ.&lt;/p&gt;&lt;h2&gt;&lt;strong&gt;ಕಪ್ಪು ಬೋರ್ಡಿನ ಕಾಯಕಲ್ಪ&lt;/strong&gt;&lt;/h2&gt;&lt;p&gt;ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಸೇರಿದಂತೆ ಮೂಲಸೌಲಭ್ಯಗಳ ಕೊರತೆ ಕಾಣಿಸಬಾರದು ಎಂಬ ಸದುದ್ದೇಶದಿಂದ ಸರ್ಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಮಕ್ಕಳ ಕಲಿಕಾ ಪ್ರಕ್ರಿಯೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಕಪ್ಪು ಬೋರ್ಡಿನ ಕಾಯಕಲ್ಪಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರುಗಳು ಮುಂದಾಗಿರುವುದು ಮಕ್ಕಳ ಕಲಿಕಾ ಕಾರ್ಯಕ್ಕೆ ಪ್ರೇರಣೆಯಾಗಿದೆ.&lt;/p&gt;&lt;h3&gt;&lt;strong&gt;ನಾವು ಬಣ್ಣ ಬಳಿಯುವ ಅಭಿಯಾನದಡಿ ಬೋರ್ಡುಗಳ ನವೀಕರಣ: ಬಿಇಒ&lt;/strong&gt;&lt;/h3&gt;&lt;p&gt;ಚಳ್ಳಕೆರೆ ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳು 357, ಸರ್ಕಾರಿ ಪ್ರೌಢಶಾಲೆಗಳು 23 ಸೇರಿ ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ 380. ಇದರಲ್ಲಿ ನೂರರಿಂದ ನೂರಾ ಇಪ್ಪತ್ತು ಸರ್ಕಾರಿ ಶಾಲೆಗಳಲ್ಲಿ ಕಪ್ಪು ಬೋರ್ಡುಗಳು ಹಾಳಾಗಿವೆ.&lt;/p&gt;&lt;p&gt;ಇದೀಗ &lsquo;ನಾವು ಬಣ್ಣ ಬಳಿಯುವ ಅಭಿಯಾನ&rsquo; ಎಂಬ ಹೆಸರಿನಲ್ಲಿ ಹಾಳಾಗಿರುವ ಬೋರ್ಡುಗಳ ನವೀಕರಣ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಶಾಲೆಗಳಲ್ಲಿ ಇರುವ ಶಾಲಾ ಸಂಚಿತ ನಿಧಿಯಲ್ಲಿರುವ ಹಣವನ್ನು ಬಳಸಿಕೊಂಡು ನವೀಕರಣ ಮಾಡಲು ಸೂಚಿಸಿದ್ದೇವೆ. ನವೀಕರಣಕ್ಕೆ ಒಂದು ಸಾವಿರದವರೆಗೆ ಖರ್ಚಾಗಬಹುದು. ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಈ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಪೂರ್ತಿ ಹಾಳಾಗಿರುವ ಬೋರ್ಡನ್ನು ಹೊಸದಾಗಿ ನಿರ್ಮಾಣ ಮಾಡಲು ಹೆಚ್ಚು ಹಣ ಬೇಕಾಗುತ್ತದೆ. ನವೀಕರಣ ಮಾಡುವಷ್ಟು ಹಾಳಾಗಿವೆ ಅಷ್ಟೇ. ಸಂಪೂರ್ಣ ಹಾಳಾಗಿರುವುದು ಎಲ್ಲಿಯೂ ಕಂಡು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್ ಅವರು ತಿಳಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw"/>
        </item>
        <item>
            <title><![CDATA[ಬರ ಪರಿಸ್ಥಿತಿ, ಜಾನುವಾರು ಸಾಕಲಾಗದೆ ಕನಿಷ್ಠ ಬೆಲೆಗೆ ಎತ್ತುಗಳ ಮಾರಾಟಕ್ಕೆ ಮುಂದಾದ ಚಿತ್ರದುರ್ಗದ ರೈತರು!]]></title>
            <link>https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa</link>
            <guid isPermaLink="true">https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa</guid>
            <pubDate>Fri, 17 Jul 2026 17:57:11 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ತೀವ್ರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಸಾಲ ಮಾಡಿ ಖರೀದಿಸಿದ್ದ ಎತ್ತುಗಳನ್ನು, ಇದೀಗ ಮೇವು ಮತ್ತು ನೀರಿನ ಅಭಾವದಿಂದಾಗಿ ಭಾರಿ ನಷ್ಟಕ್ಕೆ ಮಾರಲು ಮುಂದಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxr0k5k4n2888hgy55zx7r7j,imgname-chitradurga--farmers-1784291104356.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜು.17): &lt;/strong&gt;ಮಧ್ಯ ಕರ್ನಾಟಕದಾದ್ಯಂತ ಭೀಕರ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ವಿಕೋಪಕ್ಕೆ ತಿರುಗುತ್ತಿದ್ದು, ಕೋಟೆ ನಾಡು ಚಿತ್ರದುರ್ಗದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗಬಹುದು ಎಂಬ ಆಸೆಯಿಂದ ಜಮೀನು ಊಳಲು ಸಾಲಸೋಲ ಮಾಡಿ ಎತ್ತುಗಳನ್ನು ಖರೀದಿಸಿದ್ದ ರೈತರು, ಈಗ ತೀವ್ರ ನೀರಿನ ಅಭಾವ ಮತ್ತು ಮೇವಿನ ಕೊರತೆಯ ಭೀತಿಯಿಂದಾಗಿ ಅವುಗಳನ್ನು ಭಾರಿ ನಷ್ಟಕ್ಕೆ ಮಾರಾಟ ಮಾಡಲು ಮಾರುಕಟ್ಟೆಗೆ ಮುಗಿಬೀಳುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲೂ ಕೊಳ್ಳುವವರಿಲ್ಲದೆ ಅನ್ನದಾತರು ಕಣ್ಣೀರು ಹಾಕುತ್ತಾ ಜಾನುವಾರುಗಳೊಂದಿಗೆ ಬರಿಗೈಲಿ ಮನೆಗೆ ಮರಳುವಂತಾಗಿದೆ.&lt;/p&gt;&lt;p&gt;ಈ ಭಾಗದಲ್ಲಿ ಕೃಷಿ ದಿನಗಳು ಆರಂಭವಾಗುತ್ತಿದ್ದಂತೆ ಎತ್ತುಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆ ನಡೆಯುವುದು ಸಾಮಾನ್ಯ ರೂಢಿಯಾಗಿದೆ. ಈ ವರ್ಷವೂ ಸಕಾಲಕ್ಕೆ ಮಳೆಯಾಗಲಿದೆ ಎಂಬ ಭರವಸೆಯೊಂದಿಗೆ ನೂರಾರು ರೈತರು ಮೇ ತಿಂಗಳು ಹಾಗೂ ಜೂನ್ ಮೊದಲ ವಾರದಲ್ಲಿ ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯಿಂದ ಲಕ್ಷಾಂತರ ರೂಪಾಯಿ ನೀಡಿ ಎತ್ತುಗಳನ್ನು, ವಿಶೇಷವಾಗಿ ರಾಜ್ಯದ ಹೆಮ್ಮೆಯ &lsquo;ಅಮೃತ್&zwnj;ಮಹಲ್&rsquo; (Amruthmahal) ತಳಿಯ ಎತ್ತುಗಳನ್ನು ಖರೀದಿಸಿದ್ದರು. ಆದರೆ ಮುಂಗಾರು ಸಂಪೂರ್ಣ ಕೈಕೊಟ್ಟಿರುವುದರಿಂದ ಜಾನುವಾರುಗಳಿಗೆ ತುತ್ತು ಮೇವು, ಕುಡಿಯಲು ನೀರು ಒದಗಿಸಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ತಾವು ಕೊಂಡ ಬೆಲೆಗಿಂತಲೂ ಕಡಿಮೆ ಬೆಲೆಗೆ ಎತ್ತುಗಳನ್ನು ಮಾರಲು ರೈತರು ಮುಂದಾಗಿದ್ದಾರೆ.&lt;/p&gt;&lt;h2&gt;&lt;strong&gt;2015ರ ಭೀಕರ ಬರಗಾಲದ ನೆನಪು; ರೈತರಲ್ಲಿ ಆತಂಕ&lt;/strong&gt;&lt;/h2&gt;&lt;p&gt;ಬರಗಾಲದ ಪರಿಸ್ಥಿತಿ ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಭೀಕರ ರೂಪ ತಾಳುವ ಮುನ್ನವೇ ಹೇಗಾದರೂ ಮಾಡಿ ಜಾನುವಾರುಗಳನ್ನು ವಿಲೇವಾರಿ ಮಾಡಲು ರೈತರು ಹರಸಾಹಸ ಪಡುತ್ತಿದ್ದಾರೆ. ಈ ಹಿಂದೆ ಎದುರಿಸಿದ್ದ ಭೀಕರ ಬರದ ಕಹಿ ನೆನಪುಗಳನ್ನು ರೈತರು ಬಿಚ್ಚಿಟ್ಟಿದ್ದಾರೆ. ತೀವ್ರ ನೀರು ಮತ್ತು ಮೇವಿನ ಕೊರತೆಯಿಂದಾಗಿ 2015 ರಲ್ಲಿ ಉಂಟಾಗಿದ್ದ ಭೀಕರ ಬರಗಾಲದ ಪರಿಸ್ಥಿತಿ ಈ ಬಾರಿಯೂ ಮರುಕಳಿಸುವ ಭೀತಿ ಅವರನ್ನು ಕಾಡುತ್ತಿದೆ. ಆ ಸಮಯದಲ್ಲಿ ಮೇವು ಕೊಳ್ಳಲು ಹಣವಿಲ್ಲದೆ ಅನೇಕ ರೈತರು ತಮ್ಮ ಜೀವದಂತಿದ್ದ ಜಾನುವಾರುಗಳನ್ನು ರಸ್ತೆಗಳಲ್ಲೇ ಬಿಟ್ಟು ಹೋಗಿದ್ದ ಕರುಣಾಜನಕ ಪರಿಸ್ಥಿತಿಯನ್ನು ನೆನೆದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯು ಮಧ್ಯ ಕರ್ನಾಟಕದಲ್ಲೇ ಅತ್ಯಂತ ದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿಗೆ ಕೇವಲ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ನೆರೆಯ ಆಂಧ್ರಪ್ರದೇಶದಿಂದಲೂ ನೂರಾರು ರೈತರು ಮತ್ತು ವ್ಯಾಪಾರಿಗಳು ಜಾನುವಾರುಗಳ ವ್ಯಾಪಾರಕ್ಕಾಗಿ ಬರುತ್ತಾರೆ. ಆದರೆ ಈ ಬಾರಿ ಇಡೀ ಮಾರುಕಟ್ಟೆ ಕಳೆಗುಂದಿದ್ದು, ಎತ್ತುಗಳನ್ನು ಮಾರಲು ಬಂದವರೇ ತುಂಬಿದ್ದಾರೆ ವಿನಃ ಕೊಳ್ಳುವವರೇ ಇಲ್ಲದಂತಾಗಿದೆ.&lt;/p&gt;&lt;p&gt;ಪಶುಪಾಲನಾ ಇಲಾಖೆಯ ಪ್ರಾಥಮಿಕ ಅಂದಾಜಿನ ಪ್ರಕಾರ, ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವಿನ ದಾಸ್ತಾನು ಮುಂದಿನ ಸುಮಾರು 26 ವಾರಗಳವರೆಗೆ (ಅಂದರೆ ಆರು ತಿಂಗಳು) ಮಾತ್ರ ಜಾನುವಾರುಗಳ ಅಗತ್ಯವನ್ನು ಪೂರೈಸಬಲ್ಲದು. ಆ ನಂತರದ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಕೈಮೀರಲಿದೆ.&lt;/p&gt;&lt;h2&gt;&lt;strong&gt;ಹಿಂಗಾರು ಮಳೆಯ ಮೇಲಷ್ಟೇ ಈಗ ಎಲ್ಲರ ನಿರೀಕ್ಷೆ&lt;/strong&gt;&lt;/h2&gt;&lt;p&gt;ಪ್ರಸ್ತುತ ಉದ್ಭವಿಸಿರುವ ಈ ಗಂಭೀರ ಪರಿಸ್ಥಿತಿಯ ಕುರಿತು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ. ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದ್ದು, &quot;ಸದ್ಯಕ್ಕೆ ಜಿಲ್ಲೆಯಲ್ಲಿ ಇನ್ನು 26 ವಾರಗಳಿಗೆ ಆಗುವಷ್ಟು ಮೇವಿನ ಲಭ್ಯತೆ ಇದೆ. ಮುಂಬರುವ ಹಿಂಗಾರು ಮಳೆ ಏನಾದರೂ ಸಕಾಲಕ್ಕೆ ಬಂದರೆ, ಕುಡಿಯುವ ನೀರು ಮತ್ತು ಮೇವಿನ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಲಿದೆ,&quot; ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ರೈತರು ಮತ್ತು ಮೂಕಪ್ರಾಣಿಗಳು ಮಾತ್ರ ಬರದ ಬೇಗೆಗೆ ಬೆಂದು ಹೋಗುತ್ತಿರುವುದು ಕಟು ವಾಸ್ತವವಾಗಿದೆ.&lt;/p&gt;&lt;p&gt;&lt;/p&gt;]]></content:encoded>
            <category>chitradurga</category>
            <dc:creator>Santosh Naik</dc:creator>
            <atom:link href="https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa"/>
        </item>
        <item>
            <title><![CDATA[ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2028ಕ್ಕೆ ಪೂರ್ಣ: ರೈಲ್ವೆ ರಾಜ್ಯ ಸಚಿವ ಸೋಮಣ್ಣ]]></title>
            <link>https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</link>
            <guid isPermaLink="true">https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3</guid>
            <pubDate>Wed, 10 Jun 2026 13:32:50 +0530</pubDate>
            <description><![CDATA[ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರು ಮತ್ತು ತುಮಕೂರು ಭಾಗದ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಭೆಯಲ್ಲಿ, ಬಹುನಿರೀಕ್ಷಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗವನ್ನು 2028ರೊಳಗೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಘೋಷಿಸಿದರು. ಜೊತೆಗೆ, ತುಮಕೂರು-ರಾಯದುರ್ಗ ಯೋಜನೆ ಮತ್ತು 32 ಆರ್&zwnj;ಒಬಿ/ಆರ್&zwnj;ಯುಬಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01ktr8pzmb8s9xfx9jv0bed22g,imgname-v-somanna--1--1781078392458.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು: ಬೆಂಗಳೂರು ಮತ್ತು ತುಮಕೂರು ಭಾಗಗಳಲ್ಲಿ ನಡೆಯುತ್ತಿರುವ ಹಾಗೂ ಪ್ರಸ್ತಾವಿತ ರೈಲ್ವೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಮೀಕ್ಷಾ ಸಭೆ ನಡೆಸಿದರು. ಈ ಪರಿಶೀಲನೆಯಲ್ಲಿ ರಸ್ತೆ ಮೇಲ್ಸೇತುವೆಗಳು (ROB), ರಸ್ತೆ ಕೆಳಸೇತುವೆಗಳು (RUB) ಮತ್ತು ಪಾದಚಾರಿ ಮೇಲ್ಸೇತುವೆಗಳು (FOB) ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಒಳಗೊಂಡಿದ್ದವು. ಈ ವೇಳೆ ಕರ್ನಾಟಕ ಬಹುನಿರೀಕ್ಷಿತ ಹೊಸ ರೈಲು ಯೋಜನೆಯಾದ ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು ಮಾರ್ಗವು 2028ರಲ್ಲಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.&lt;/p&gt;&lt;h2&gt;ಸಚಿವರ ಸ್ವಕ್ಷೇತ್ರ ತುಮಕೂರಿನಲ್ಲಿ 32 ಆರ್&zwnj;ಒಬಿ, ಆರ್&zwnj;ಯುಬಿ ಕಾಮಗಾರಿ: 2026-27ರ ಗಡುವು&lt;/h2&gt;&lt;p&gt;ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 32 ROB ಮತ್ತು RUB ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪಂಡಿತನಹಳ್ಳಿ, ಮೈದಾಳ, ಬಡ್ಡಿಹಳ್ಳಿ, ಬಟವಾಡಿ, ಹೆಗ್ಗೆರೆ, ಮಲ್ಲಸಂದ್ರ, ಬೆಂಚೆಗೆರೆ, ನಿಟ್ಟೂರು-ಮೈಸೂರು ಮಾರ್ಗ, ನಂದಿಹಳ್ಳಿ ಗೇಟ್ ಹಾಗೂ ಹಾಸನ ಮತ್ತು ಬಿದಿರೆಗುಡಿ ಕಡೆಗೆ ಬಿಎಚ್ ರಸ್ತೆಯಲ್ಲಿನ ಸೇತುವೆಗಳು ಪ್ರಮುಖವಾಗಿವೆ. ಈ ಎಲ್ಲಾ ಕಾಮಗಾರಿಗಳನ್ನು 2026&ndash;27ರೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.&lt;/p&gt;&lt;h2&gt;ರೂ. 1,801 ಕೋಟಿ ವೆಚ್ಚದ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ&lt;/h2&gt;&lt;p&gt;ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಇಲಾಖೆಯ ನಡುವೆ 50:50 ವೆಚ್ಚ ಹಂಚಿಕೆ ಮಾದರಿಯಡಿಯಲ್ಲಿ ಒಟ್ಟು 1,801 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿಗೊಳ್ಳುತ್ತಿರುವ 191 ಕಿ.ಮೀ. ಉದ್ದದ ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯನ್ನು ಸಚಿವರು ಸೂಕ್ಷ್ಮವಾಗಿ ಪರಿಶೀಲಿಸಿದರು. ಈ ಯೋಜನೆಯು ಮಧ್ಯ ಕರ್ನಾಟಕದ ಕನೆಕ್ಟಿವಿಟಿಗೆ ಹೊಸ ಕ್ರಾಂತಿಯನ್ನೇ ತರಲಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿನ ಶೇ.92ಕ್ಕಿಂತ ಹೆಚ್ಚು ಭಾಗವನ್ನು ಈಗಾಗಲೇ ಸ್ವಾಧೀನಪಡಿಸಿಕೊಂಡಿರುವುದಾಗಿ ಸಚಿವರು ತಿಳಿಸಿದರು. ಉರುಕೆರೆ&ndash;ತಿಮ್ಮರಾಜನಹಳ್ಳಿ (13.31 ಕಿ.ಮೀ.) ವಿಭಾಗ ಪೂರ್ಣಗೊಂಡಿದ್ದು, ಕಾರ್ಯಾಚರಣೆಗೆ ಸಿದ್ಧವಾಗಿದೆ. ಸಂಪೂರ್ಣ ಯೋಜನೆಯನ್ನು ಫೆಬ್ರವರಿ 2028ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.&lt;/p&gt;&lt;h2&gt;&amp;nbsp;ರೂ. 2,496 ಕೋಟಿ ವೆಚ್ಚದ ತುಮಕೂರು-ರಾಯದುರ್ಗ ಅಂತರರಾಜ್ಯ ಯೋಜನೆ&amp;nbsp;&lt;/h2&gt;&lt;p&gt;ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನು ಬೆಸೆಯುವ ಅತ್ಯಂತ ಮಹತ್ವಾಕಾಂಕ್ಷೆಯ 206 ಕಿ.ಮೀ. ಉದ್ದದ ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿಯನ್ನು ಸಭೆಯಲ್ಲಿ ಮುನ್ನೆಲೆಗೆ ತರಲಾಯಿತು. ಈ ಬೃಹತ್ ಯೋಜನೆಗೆ ಒಟ್ಟು 2,496 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ.&lt;/p&gt;&lt;p&gt;ಈ ಯೋಜನೆಯ ಒಟ್ಟು ಉದ್ದದ ಪೈಕಿ ಈಗಾಗಲೇ 83 ಕಿ.ಮೀ. ರೈಲು ಮಾರ್ಗ ಯಶಸ್ವಿಯಾಗಿ ಕಾರ್ಯಾರಂಭ ಮಾಡಿದೆ. ಪ್ರಸ್ತುತ ಪ್ರಗತಿಯಲ್ಲಿರುವ ತುಮಕೂರು-ಉರುಕೆರೆ ವಿಭಾಗವು ಶಾಸನಬದ್ಧ ಸುರಕ್ಷತಾ ತಪಾಸಣೆಯಲ್ಲಿ (Statutory Safety Inspection) ಉತ್ತೀರ್ಣಗೊಂಡಿದ್ದು, ಪಾವಗಡ-ದೊಡ್ಡಹಳ್ಳಿ ವಿಭಾಗವು ಉದ್ಘಾಟನೆಗೆ ಸಂಪೂರ್ಣ ಸಜ್ಜಾಗಿದೆ. ಇನ್ನುಳಿದ ಮಾರ್ಗಗಳ ಕಾಮಗಾರಿಗಳು ಅತ್ಯಂತ ವೇಗವಾಗಿ ಪ್ರಗತಿಯಲ್ಲಿದ್ದು, ಶೇ. 97 ಕ್ಕೂ ಹೆಚ್ಚು ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯದ ಹಂತ ತಲುಪಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.&lt;/p&gt;&lt;p&gt;ಉಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗೊಳಿಸಲು, ರಸ್ತೆ ಮುಚ್ಚುವಿಕೆ ಮತ್ತು ತಿರುವುಗಳಿಗೆ ಸಮಯೋಚಿತ ಅನುಮೋದನೆ ಪಡೆಯಲು ಹಾಗೂ ವಿದ್ಯುತ್ ಮಾರ್ಗಗಳು, ನೀರಿನ ಪೈಪ್&zwnj;ಲೈನ್&zwnj;ಗಳು ಮತ್ತು ಅರಣ್ಯ ಅನುಮತಿಗಳಂತಹ ಉಪಯುಕ್ತತೆ ಸ್ಥಳಾಂತರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಅತ್ಯವಶ್ಯಕ ಎಂದು ಸೋಮಣ್ಣ ಒತ್ತಿ ಹೇಳಿದರು. ಈ ಸಭೆಯಲ್ಲಿ ನೈಋತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/v-somanna-railway-review-meeting-bengaluru-tumakuru-chitradurga-davanagere-direct-line-to-completion-by-2028-gdp/articleshow-mbk1sz3"/>
        </item>
        <item>
            <title><![CDATA[ಹುಬ್ಬಳ್ಳಿ-ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ, 5 ಜಿಲ್ಲೆಯ ಪ್ರವಾಸಿಗರಿಗೆ ಇದೊಂದು ಆಫರ್!]]></title>
            <link>https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</link>
            <guid isPermaLink="true">https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</guid>
            <pubDate>Wed, 17 Jun 2026 12:01:04 +0530</pubDate>
            <description><![CDATA[ನೈಋತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 20 ಮತ್ತು 21 ರಂದು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಪ್ರವಾಸಿಗರಿಗೆ ಅನುಕೂಲಕರವಾದ ವೇಳಾಪಟ್ಟಿಯನ್ನು ಹೊಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khp601b9hctbmkhxep8fe8wz,imgname-indian-railway--2--1771344758121.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಹುಬ್ಬಳ್ಳಿ ಮತ್ತು ಪ್ರವಾಸಿ ತಾಣಗಳಿರುವ ಚಿಕ್ಕಮಗಳೂರು ನಡುವೆ ಪ್ರಯಾಣಿಸುವ ಜನರಿಗೆ ನೈಋತ್ಯ ರೈಲ್ವೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಹಾಗೂ ರೈಲುಗಳಲ್ಲಿನ ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಜೂನ್ 20 ಮತ್ತು 21 ರಂದು ಈ ಎರಡೂ ನಗರಗಳ ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ರೈಲು ಉತ್ತರ ಮತ್ತು ಮಧ್ಯ ಕರ್ನಾಟಕದ ಒಟ್ಟು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಮಾನ್ಸೂನ್ ಪ್ರಕೃತಿ ಸವಿಯಲು ಇದೊಂದು ಆಫರ್ ನೀಡಿದಂತಿದೆ. ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾದ ಈ ರೈಲಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.&lt;/p&gt;&lt;h2&gt;ರೈಲಿನ ವೇಳಾಪಟ್ಟಿ ಮತ್ತು ಸಂಚಾರದ ವಿವರ&lt;/h2&gt;&lt;p&gt;ಈ ವಿಶೇಷ ರೈಲನ್ನು ಜೂನ್ 20 (ಶನಿವಾರ) ಮತ್ತು ಜೂನ್ 21 (ಭಾನುವಾರ) ರಂದು ಒಟ್ಟು ಎರಡು ಟ್ರಿಪ್&zwnj;ಗಳ ಕಾಲ ಓಡಿಸಲಾಗುತ್ತಿದೆ.&lt;/p&gt;&lt;p&gt;ಹುಬ್ಬಳ್ಳಿ - ಚಿಕ್ಕಮಗಳೂರು ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07341): ಜೂನ್ 20 ಮತ್ತು 21 ರಂದು ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಕ್ಕೆ ಚಿಕ್ಕಮಗಳೂರು ನಿಲ್ದಾಣವನ್ನು ತಲುಪಲಿದೆ.&lt;/p&gt;&lt;p&gt;ಚಿಕ್ಕಮಗಳೂರು - ಹುಬ್ಬಳ್ಳಿ ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07342): ಜೂನ್ 20 ಮತ್ತು 21 ರಂದು ಚಿಕ್ಕಮಗಳೂರಿನಿಂದ ಸಂಜೆ 5:30 ಕ್ಕೆ ಹೊರಟು, ಅದೇ ದಿನ ರಾತ್ರಿ 11:20 ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ತಲುಪಲಿದೆ.&lt;/p&gt;&lt;h2&gt;ಎಲ್ಲೆಲ್ಲಿ ನಿಲುಗಡೆ ಇರಲಿದೆ? (ಮಾರ್ಗ ಮತ್ತು ನಿಲ್ದಾಣಗಳು)&lt;/h2&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಮಾರ್ಗಮಧ್ಯೆ ಪ್ರಮುಖ ನಗರಗಳು ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.&lt;/p&gt;&lt;p&gt;ಪ್ರಮುಖ ನಿಲುಗಡೆಗಳು: ಕುಂದಗೋಳ, ಸಂಶಿ (ಸೌಂಶಿ), ಯಳವಿಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು(ಚಿತ್ರದುರ್ಗ), ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ.&lt;/p&gt;&lt;h2&gt;ಬೋಗಿಗಳ ವಿವರ&amp;nbsp;&lt;/h2&gt;&lt;p&gt;ಈ ವಿಶೇಷ ರೈಲು ಒಟ್ಟು 10 ಬೋಗಿಗಳನ್ನು (Coaches) ಒಳಗೊಂಡಿರುತ್ತದೆ. ಸಾಮಾನ್ಯ ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೋಗಿಗಳನ್ನು ವಿನ್ಯಾಸಗೊಳಿಸಲಾಗಿದೆ:&lt;/p&gt;&lt;ul&gt; &lt;li&gt;1 ಸ್ಲೀಪರ್ ಕ್ಲಾಸ್ ಬೋಗಿ (Sleeper Class)&lt;/li&gt; &lt;li&gt;7 ಸಾಮಾನ್ಯ ದರ್ಜೆ ಬೋಗಿಗಳು (General Coach)&lt;/li&gt; &lt;li&gt;2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್ ಹಾಗೂ ದಿವ್ಯಾಂಗರ ವಿಶೇಷ ಕಂಪಾರ್ಟ್&zwnj;ಮೆಂಟ್ ಬೋಗಿಗಳು.&lt;/li&gt;&lt;/ul&gt;&lt;h2&gt;ಪ್ರವಾಸಿಗರಿಗೆ &amp;nbsp;ಸೂಕ್ತ ಸಮಯದ ಪ್ಲಾನಿಂಗ್!&lt;/h2&gt;&lt;p&gt;ನೈಋತ್ಯ ರೈಲ್ವೆ ಅಧಿಕಾರಿಗಳು ಈ ರೈಲಿನ ವೇಳಾಪಟ್ಟಿಯನ್ನು ಪ್ರವಾಸಿಗರಿಗೆ ಅತ್ಯಂತ ಅನುಕೂಲವಾಗುವ ರೀತಿಯಲ್ಲಿ ಸಿದ್ಧಪಡಿಸಿದ್ದಾರೆ.&lt;/p&gt;&lt;p&gt;ರೈಲು ಬೆಳಗ್ಗೆ 11:15ಕ್ಕೆ ಚಿಕ್ಕಮಗಳೂರು ತಲುಪುವುದರಿಂದ, ಪ್ರವಾಸಿಗರು ಆರಾಮವಾಗಿ &amp;nbsp;ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾಬುಡನ್&zwnj;ಗಿರಿ ಮುಂತಾದ ಕಡೆ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಮಾಡಲು ಸಾಕಷ್ಟು ಸಮಯ ಸಿಗುತ್ತದೆ.&lt;/p&gt;&lt;p&gt;ಇನ್ನು ಹಿಂದಿರುಗುವಾಗ ಭಾನುವಾರ ಸಂಜೆ 5:30ಕ್ಕೆ ರೈಲು ಇರುವುದರಿಂದ, ವೀಕೆಂಡ್&zwnj;ನಲ್ಲಿ ಇಡೀ ದಿನ ಸುತ್ತಾಡಿ, ಯಾವುದೇ ಆತುರವಿಲ್ಲದೇ ಆರಾಮವಾಗಿ ರೈಲು ಹತ್ತಿ ರಾತ್ರಿಯೊಳಗೆ ಹುಬ್ಬಳ್ಳಿಗೆ ತಲುಪಬಹುದಾಗಿದೆ. ಸಾರ್ವಜನಿಕರು ಹಾಗೂ ಪ್ರಕೃತಿ ಪ್ರೇಮಿಗಳು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಕೋರಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm"/>
        </item>
        <item>
            <title><![CDATA[₹75 ಲಕ್ಷ ವೆಚ್ಚದಲ್ಲಿ ಈದ್ಗಾ ಮೈದಾನ, ₹4 ಕೋಟಿ ವೆಚ್ಚದಲ್ಲಿ ಏರ್‌ ಕಂಡಿಷನ್ಡ್ ಶಾದಿಮಹಲ್.. ಸರ್ವೇ ಜನಃ ಸುಖಿನೋ ಭವಂತು ಎಂದ ಬಿಜೆಪಿ ಶಾಸಕ]]></title>
            <link>https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</link>
            <guid isPermaLink="true">https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb</guid>
            <pubDate>Fri, 29 May 2026 13:05:06 +0530</pubDate>
            <description><![CDATA[ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು 75 ಲಕ್ಷ ರು. ವೆಚ್ಚದ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ʻಸರ್ವೇ ಜನಃ ಸುಖಿನೋ ಭವಂತುʼ ಧ್ಯೇಯದಡಿ ತಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದಾಗಿ ತಿಳಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kssa93cyy29d46k3zw87pha1,imgname-----------------------2026-05-29t125046.468-1780039847325.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳಲ್ಕೆರೆ (ಮೇ.29):&lt;/strong&gt; ಕ್ಷೇತ್ರದಲ್ಲಿ ವಿಭಿನ್ನ ಮನೋಧರ್ಮದ ಜನರು ಇರುವುದು ಸಹಜ. ನನಗೆ ಆಗದವರು ಇದ್ದಾರೆ, ವಿಶ್ವಾಸಿಕರೂ ಇದ್ದಾರೆ. ಆದರೆ ನಾನು ಯಾರನ್ನೂ ಕಡೆಗಣಿಸದೆ ʻಸರ್ವೇ ಜನಃ ಸುಖಿನೋ ಭವಂತುʼ ಎಂಬ ಧ್ಯೇಯವನ್ನಿಟ್ಟುಕೊಂಡು ಕೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.&lt;/p&gt;&lt;p&gt;75 ಲಕ್ಷ ರು. ವೆಚ್ಚದಲ್ಲಿ ಪಟ್ಟಣದ ಹೊರ ವಲಯದಲ್ಲಿರುವ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.&lt;/p&gt;&lt;h2&gt;ಏರ್&zwnj; ಕಂಡಿಷನ್&zwnj;ವುಳ್ಳ ಶಾದಿ ಮಹಲ್ ನಿರ್ಮಾಣ&lt;/h2&gt;&lt;p&gt;ರಾಜ್ಯ ಸರ್ಕಾರದ ಅನುದಾನದಲ್ಲಿ ಶಾದಿ ಮಹಲ್&zwnj;ಗೆ ಹಣ ನೀಡಲು ಅವಕಾಶವಿಲ್ಲ. ಆದರೂ 4 ಕೋಟಿ ರು. ವೆಚ್ಚದಲ್ಲಿ ಏರ್ ಕಂಡೀಷನ್&zwnj;ವುಳ್ಳ ಶಾದಿ ಮಹಲ್ ಕಟ್ಟಿಸಲಾಗುತ್ತಿದೆ. ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮನವೊಲಿಸಿ ಶಾದಿ ಮಹಲ್&zwnj; ನಿರ್ಮಾಣಕ್ಕೆ ಅನುದಾನ ತಂದಿದ್ದೆ ಎಂದರು.&lt;/p&gt;&lt;p&gt;ಎಲ್ಲಿ ಯಾರಿಗೆ ನ್ಯಾಯ ಕೊಡಬೇಕು, ಅಲ್ಲಾನಿಗೆ ಗೊತ್ತಿದೆ!&lt;/p&gt;&lt;p&gt;ಹುಟ್ಟು-ಸಾವಿನ ನಡುವೆ ಇರುವ ಜೀವನ ಅತ್ಯಂತ ಪವಿತ್ರವಾದುದು. ಮನುಷ್ಯತ್ವವಿರುವ ಎಲ್ಲರೂ ಅವಕಾಶ ಸಿಕ್ಕಾಗ ಹತ್ತಾರು ಜನ ಮೆಚ್ಚುವ ರೀತಿ ಕೆಲಸ ಮಾಡಬೇಕು. ಅದೆ ನಿಜವಾದ ಮಾನವ ಧರ್ಮ. 32 ವರ್ಷಗಳ ಹಿಂದೆ ಭರಮಸಾಗರದಿಂದ ಪ್ರಥಮ ಬಾರಿ ಸ್ಪರ್ಧಿಸಿ ಈಗ ಐದು ಬಾರಿ ಶಾಸಕನಾಗಿದ್ದೇನೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದೇನೆ. ಎಲ್ಲಿ ಯಾರಿಗೆ ನ್ಯಾಯ ಕೊಡಬೇಕೆಂಬುದು ಅಲ್ಲಾನಿಗೆ ಗೊತ್ತಿದೆ. ನನಗೆ ಜಾತಿ ಗೊತ್ತಿಲ್ಲ. ಎಲ್ಲರನ್ನು ಕುಟುಂಬದವರಂತೆ ಕಾಣುತ್ತಿದ್ದೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿಯೂ ಗದ್ದಲ ಗಲಾಟೆಗೆ ಅವಕಾಶ ಕೊಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹಗಲು ರಾತ್ರಿ ಪ್ರಾಮಾಣ ಕವಾಗಿ ಶ್ರಮಿಸುತ್ತಿದ್ದೇನೆಂದು ತಿಳಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯರಾದ ಆರ್.ಎ.ಅಶೋಕ್, ಪಿ.ಮುರುಗೇಶ್, ಮಲ್ಲಿಕಾರ್ಜುನಸ್ವಾಮಿ, ಮುಸ್ಲಿಂ ಮುಖಂಡರಾದ ಮುತ್ತುಲಿ ಸಾಬ್, ಅಲಿಂಸಾಬ್, ಸೈಯದ್&zwnj;ಸಾಬ್, ಭಕ್ಷಿಸಾಬ್, ಜಾಕಿರ್ ಇನ್ನಿತರರು ಹಾಜರಿದ್ದರು&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/holalkere-bjp-mla-m-chandrappa-launches-eidgah-ground-works-worth-rs-75-lakh-rav/articleshow-uey97eb"/>
        </item>
        <item>
            <title><![CDATA[ಚಿತ್ರದುರ್ಗ: 'ದೇವರ ಕೋಣ'ದ ಪ್ರಾಣ ಉಳಿಸಿದ ಯಶಸ್ವಿ ರುಮಿನೊಟಮಿ ಶಸ್ತ್ರಚಿಕಿತ್ಸೆ, ಹೊಟ್ಟೆಯಿಂದ 6 ಬಕೆಟ್ ಕೊಳೆತ ಆಹಾರ ತೆಗೆದ ವೈದ್ಯರು!]]></title>
            <link>https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e</link>
            <guid isPermaLink="true">https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e</guid>
            <pubDate>Sat, 18 Jul 2026 10:47:10 +0530</pubDate>
            <description><![CDATA[ಚಿತ್ರದುರ್ಗದ ನಾಗಸಮುದ್ರ ಗ್ರಾಮದಲ್ಲಿ ಅತಿಯಾಗಿ ಅನ್ನ-ಪಾಯಸ ಸೇವಿಸಿ ಅಸ್ವಸ್ಥಗೊಂಡಿದ್ದ ದೇವರ ಕೋಣಕ್ಕೆ ಪಶುವೈದ್ಯರು ಯಶಸ್ವಿ 'ರುಮಿನೊಟಮಿ' ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೋಣನ ಹೊಟ್ಟೆಯಿಂದ ಸುಮಾರು 6 ಬಕೆಟ್ ಜೀರ್ಣವಾಗದ ಆಹಾರವನ್ನು ಹೊರತೆಗೆದು, ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxst62khamxt1hvt91143axa,imgname-buffalo-ruminotomy-surgery-in-chitradurga-1784351492720.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಅನ್ನ ಹಾಗೂ ಪಾಯಸ ಅತಿಯಾಗಿ ತಿಂದು ಜೀರ್ಣಿಸಿಕೊಳ್ಳಲಾಗದೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ &lsquo;ದೇವರ ಕೋಣ&rsquo;ನಿಗೆ ಪಶುವೈದ್ಯರು ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ, ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಪಶು ಇಲಾಖೆಯ ಸಕಾಲಿಕ ಹಾಗೂ ಅತ್ಯಂತ ಜವಾಬ್ದಾರಿಯುತ ಈ ಕಾರ್ಯಕ್ಕೆ ನಾಗಸಮುದ್ರ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.&lt;/p&gt;&lt;h2&gt;10 ದಿನಗಳಿಂದ ಜೀರ್ಣವಾಗದ ಆಹಾರ: ಗಂಭೀರ ಸ್ಥಿತಿಯಲ್ಲಿದ್ದ ಕೋಣ&lt;/h2&gt;&lt;p&gt;ನಾಗಸಮುದ್ರ ಗ್ರಾಮದಲ್ಲಿ ದೇವರಿಗೆ ಬಿಟ್ಟಿದ್ದ ಕೋಣವು ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಕ್ತರು ನೀಡಿದ್ದ ಅನ್ನ ಮತ್ತು ಪಾಯಸವನ್ನು ಅತಿಯಾಗಿ ಸೇವಿಸಿತ್ತು. ಆದರೆ, ಕಳೆದ 10 ದಿನಗಳಿಂದ ಆ ಆಹಾರ ಜೀರ್ಣವಾಗದೆ ಕೋಣ ತೀವ್ರ ಅಸ್ವಸ್ಥಗೊಂಡಿತ್ತು. ಯಾವುದೇ ಆಹಾರ ಅಥವಾ ನೀರನ್ನು ತೆಗೆದುಕೊಳ್ಳಲಾಗದೆ ಕೋಣದ ಹೊಟ್ಟೆ ಉಬ್ಬರಿಸಿಕೊಂಡು, ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಹಳ್ಳಿಯ ಆಸ್ತಿಯಂತಿದ್ದ ದೇವರ ಕೋಣದ ಈ ಸ್ಥಿತಿಯನ್ನು ಕಂಡು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದರು.&lt;/p&gt;&lt;h2&gt;ಪಶುವೈದ್ಯರ ನೇತೃತ್ವದಲ್ಲಿ &lsquo;ರುಮಿನೊಟಮಿ&rsquo; ಶಸ್ತ್ರಚಿಕಿತ್ಸೆ ಯಶಸ್ವಿ&lt;/h2&gt;&lt;p&gt;ಕೋಣದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪಶುಪಾಲನಾ ಇಲಾಖೆಯ ಅಧಿಕಾರಿಗಳು ನಾಗಸಮುದ್ರ ಗ್ರಾಮಕ್ಕೆ ಧಾವಿಸಿದರು. ಪಶು ಇಲಾಖೆಯ ಸಹಾಯಕ ನಿರ್ದೇಶಕರಾದ (ADA) ಡಾ. ವಿಜಯಕುಮಾರ್ ಅವರ ನೇತೃತ್ವದ ವೈದ್ಯರ ತಂಡವು ತಕ್ಷಣವೇ ಕಾರ್ಯಪ್ರವೃತ್ತವಾಯಿತು.&lt;/p&gt;&lt;p&gt;ಕೋಣಕ್ಕೆ ಜೀರ್ಣಾಂಗವ್ಯೂಹದ ಸಮಸ್ಯೆಯಾಗಿರುವುದನ್ನು ಪತ್ತೆಹಚ್ಚಿದ ವೈದ್ಯರು, ಅದಕ್ಕೆ &lsquo;ರುಮಿನೊಟಮಿ&rsquo; (Ruminotomy - ಜಾನುವಾರುಗಳ ಹೊಟ್ಟೆಯ ಮೊದಲ ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆರೆಯುವ ಪ್ರಕ್ರಿಯೆ) ಮಾಡಲು ನಿರ್ಧರಿಸಿದರು. ಅತ್ಯಂತ ಜಾಗರೂಕತೆಯಿಂದ ನಡೆಸಲಾದ ಈ ಶಸ್ತ್ರಚಿಕಿತ್ಸೆಯು ಸಂಪೂರ್ಣವಾಗಿ ಯಶಸ್ವಿಯಾಗಿದೆ.&lt;/p&gt;&lt;h2&gt;ಹೊಟ್ಟೆಯಿಂದ &amp;nbsp;ಹೊರತೆಗೆದ್ರು 6 ಬಕೆಟ್ ಆಹಾರ!&lt;/h2&gt;&lt;p&gt;ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪಶುವೈದ್ಯರು ಕೋಣದ ಹೊಟ್ಟೆಯನ್ನು ತೆರೆದಾಗ, ಅಲ್ಲಿ ಕಳೆದ 10 ದಿನಗಳಿಂದ ಜೀರ್ಣವಾಗದೆ ಕೊಳೆಯುತ್ತಿದ್ದ ಅನ್ನ ಮತ್ತು ಪಾಯಸದ ಮಿಶ್ರಣ ಪತ್ತೆಯಾಗಿದೆ. ವೈದ್ಯರು ಸತತ ಪ್ರಯತ್ನ ನಡೆಸಿ ಕೋಣದ ಹೊಟ್ಟೆಯಿಂದ ಬರೋಬ್ಬರಿ 6 ಬಕೆಟ್&zwnj;ಗಳಷ್ಟು ಜೀರ್ಣವಾಗದ ತ್ಯಾಜ್ಯ ಆಹಾರವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.&lt;/p&gt;&lt;h2&gt;ಕೋಣದ ಆರೋಗ್ಯದಲ್ಲಿ ಚೇತರಿಕೆ: ವೈದ್ಯರ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ&lt;/h2&gt;&lt;p&gt;ಶಸ್ತ್ರಚಿಕಿತ್ಸೆಯ ನಂತರ ಕೋಣನಿಗೆ ಅಗತ್ಯ ಔಷಧೋಪಚಾರ ಹಾಗೂ ಗ್ಲುಕೋಸ್ ನೀಡಲಾಗಿದ್ದು, ಪ್ರಸ್ತುತ ಅದರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಕೋಣವು ಪ್ರಾಣಾಪಾಯದಿಂದ ಪಾರಾಗಿದ್ದು, ಸಹಜ ಸ್ಥಿತಿಗೆ ಮರಳುತ್ತಿದೆ. ತಮ್ಮ ನೆಚ್ಚಿನ ದೇವರ ಕೋಣವನ್ನು ಕಷ್ಟದ ಪರಿಸ್ಥಿತಿಯಲ್ಲೂ ಶಸ್ತ್ರಚಿಕಿತ್ಸೆಯ ಮೂಲಕ ಬದುಕುಳಿಸಿದ ಡಾ. ವಿಜಯಕುಮಾರ್ ಹಾಗೂ ಅವರ ಪಶುವೈದ್ಯಕೀಯ ತಂಡದ ಅಸಾಧಾರಣ ಕಾರ್ಯಕ್ಕೆ ನಾಗಸಮುದ್ರದ ಹಳ್ಳಿಗರು ಭಾವುಕರಾಗಿ ಮುಕ್ತಕಂಠದಿಂದ ಕೃತಜ್ಞತೆ ಸಲ್ಲಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e"/>
        </item>
        <item>
            <title><![CDATA[ಹಿರಿಯೂರು ಬೈಎಲೆಕ್ಷನ್‌: ದಳ ಜತೆ ಚರ್ಚೆಗೆ 3 ನಾಯಕರಿಗೆ ಬಿಜೆಪಿ ಹೊಣೆ; ಜಂಟಿ ಅಭ್ಯರ್ಥಿ?]]></title>
            <link>https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa</link>
            <guid isPermaLink="true">https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa</guid>
            <pubDate>Mon, 06 Jul 2026 05:22:38 +0530</pubDate>
            <description><![CDATA[ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಿತ್ರಪಕ್ಷ ಜೆಡಿಎಸ್ ಜೊತೆಗೂಡಿ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಸಿ.ಟಿ. ರವಿ ಅವರಿಗೆ ಬಿಜೆಪಿ ಜವಾಬ್ದಾರಿ ವಹಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jwn2b8e4stfxq94q8s69syzn,imgname-bjp-flag-pic-1748758798788.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಚಿತ್ರದುರ್ಗ ಜಿಲ್ಲೆಯಲ್ಲಿ ತೆರವಾದ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮಿತ್ರ ಪಕ್ಷ ಜೆಡಿಎಸ್&zwnj; ಜತೆ ಈ ಸಂಬಂಧ ಚರ್ಚೆ ನಡೆಸಲು ಮೂವರು ನಾಯಕರಿಗೆ ಜವಾಬ್ದಾರಿ ನೀಡಿದೆ.&lt;/p&gt;&lt;p&gt;ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್&zwnj;, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಭಾನುವಾರ ನಡೆದ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.&lt;/p&gt;&lt;h2&gt;&lt;strong&gt;ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ&lt;/strong&gt;&lt;/h2&gt;&lt;p&gt;ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋರ್ ಕಮಿಟಿ ಸಭೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಬಗ್ಗೆ ಚರ್ಚೆ ಆಗಿದೆ. ಹಿರಿಯರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಸಿ.ಟಿ.ರವಿ ಅವರು ಜೆಡಿಎಸ್&zwnj;ನ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ ರೂಪಿಸಲು ಜವಾಬ್ದಾರಿ ನೀಡಿದ್ದೇವೆ ಎಂದು ತಿಳಿಸಿದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa"/>
        </item>
        <item>
            <title><![CDATA[Renukaswamy case: ತಾಯಿ ರತ್ನಪ್ರಭಾ ಪಾಟೀಸವಾಲಿಗೆ ಅನುಮತಿ ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್!]]></title>
            <link>https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</link>
            <guid isPermaLink="true">https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</guid>
            <pubDate>Wed, 24 Jun 2026 13:12:54 +0530</pubDate>
            <description><![CDATA[ನಟ ದರ್ಶನ್ ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ರೇಣುಕಾಸ್ವಾಮಿ ತಾಯಿಯನ್ನು ಪಾಟೀಸವಾಲು ಮಾಡಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ದರ್ಶನ್ ಪರ ವಕೀಲರ ಮನವಿ ಮೇರೆಗೆ, ನ್ಯಾಯಾಲಯವು ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvw8zwc879afmx90k1vpec6f,imgname-renukaswamy-case-1782286643592.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.24): ಸ್ಯಾಂ&lt;/strong&gt;ಡಲ್&zwnj;ವುಡ್ ನಟ ದರ್ಶನ್ ಮತ್ತು ಗ್ಯಾಂಗ್&zwnj;ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾನೂನು ಹೋರಾಟ ತೀವ್ರಗೊಂಡಿದೆ. ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು ಪಾಟೀಸವಾಲು (Cross-examination) ನಡೆಸಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ.&lt;/p&gt;&lt;h3&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h3&gt;&lt;p&gt;ಈ ಹಿಂದೆ ಜನವರಿ ತಿಂಗಳಿನಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಪ್ರಾಸಿಕ್ಯೂಷನ್, ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು 'ಪ್ರತಿಕೂಲ ಸಾಕ್ಷಿ' (Hostile Witness) ಎಂದು ಪರಿಗಣಿಸಿ, ಅವರನ್ನು ಪಾಟೀಸವಾಲು ನಡೆಸಲು ಅನುಮತಿ ನೀಡುವಂತೆ ಕೋರಿತ್ತು. ಆದರೆ, ಪ್ರಾಸಿಕ್ಯೂಷನ್&zwnj;ನ ಈ ಮನವಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿತ್ತು. ಕೆಳಹಂತದ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್&zwnj;ಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.&lt;/p&gt;&lt;h2&gt;&lt;strong&gt;ಹೈಕೋರ್ಟ್&zwnj;ನಲ್ಲಿ ನಡೆದಿದ್ದೇನು?&lt;/strong&gt;&lt;/h2&gt;&lt;p&gt;ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್&zwnj;ನ ಏಕಸದಸ್ಯ ಪೀಠವು ಕೈಗೆತ್ತಿಕೊಂಡಿತು. ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಹಾಜರಾಗಿ, ವಾದ ಮಂಡಿಸಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಮನವಿ ಮಾಡಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.&lt;/p&gt;&lt;p&gt;ದರ್ಶನ್ ಮತ್ತು ತಂಡದ ವಿರುದ್ಧದ ಈ ಕೊಲೆ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಸಾಕ್ಷಿಗಳ ವಿಚಾರಣೆ ಮತ್ತು ಪಾಟೀಸವಾಲು ಪ್ರಕ್ರಿಯೆಗಳು ಅತ್ಯಂತ ನಿರ್ಣಾಯಕವಾಗಿವೆ. ರತ್ನಪ್ರಭಾ ಅವರ ಸಾಕ್ಷ್ಯವು ಈ ಪ್ರಕರಣದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗ ಹೈಕೋರ್ಟ್ ಜುಲೈ 2 ರಂದು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby"/>
        </item>
        <item>
            <title><![CDATA[Guarantee Schemes: ಗ್ಯಾರಂಟಿ ಯೋಜನೆ ನಿಲ್ಲುತ್ತದೆಯೇ? ಎಚ್‌.ಎಂ.ರೇವಣ್ಣ ಕೊಟ್ಟ ಉತ್ತರ ವೈರಲ್!]]></title>
            <link>https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus</link>
            <guid isPermaLink="true">https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus</guid>
            <pubDate>Wed, 17 Jun 2026 22:24:18 +0530</pubDate>
            <description><![CDATA[&lt;p&gt;Guarantee Schemes: ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಪರಿಷ್ಕರಣೆಯ ನಂತರ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸವಲತ್ತುಗಳು ಸಿಗಲಿವೆ ಎಂದು ಎಚ್&zwnj;.ಎಂ.ರೇವಣ್ಣ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01d78sjgbykh9545bd2m9me2zj,imgname-HM-revanna.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಸದುರ್ಗ (ಜೂ.17): &lt;/strong&gt;ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಪರಿಷ್ಕರಣೆಯ ನಂತರ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸವಲತ್ತುಗಳು ಸಿಗಲಿವೆ ಎಂದು ಗ್ಯಾರಂಟಿ ಯೋಜನೆಯ ರಾಜ್ಯಾಧ್ಯಕ್ಷ ಎಚ್&zwnj;.ಎಂ.ರೇವಣ್ಣ ಹೇಳಿದರು.&lt;/p&gt;&lt;p&gt;ಪಟ್ಟಣದ ಗ್ಯಾರಂಟಿ ಯೋಜನೆ ಸಮಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದ ಪ್ರತಿಯೊಬ್ಬ ಕಟ್ಟ ಕಡೆಯ ಫಲಾನುಭವಿಗಳಿಗೂ ತಲುಪಬೇಕು ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವುದು ಈ ಯೋಜನೆಯ ಉದ್ದೇಶ ಆದರೆ ಕಳೆದ ಡಿಸೆಂಬರ್&zwnj;ನಲ್ಲಿ ನಡೆದ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಭೆಯಲ್ಲಿ ಸುಮಾರು 79 ಸಾವಿರ ಕೋಟಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗದೆ ಬ್ಯಾಂಕುಗಳಲ್ಲಿಯೇ ಉಳಿದ ಹಿನ್ನಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ ಎಂದರು.&lt;/p&gt;&lt;p&gt;ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುತ್ತಿದ್ದ ಬಿಜೆಪಿ ಇತ್ತೀಚಿಗೆ ನಡೆದ ಹಲವು ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದೆ. ಹಾಗಾದರೆ ಆ ರಾಜ್ಯಗಳು ದೀವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು ಸಿದ್ದರಾಮಯ್ಯವನರು ಈ ಯೋಜನೆಗೆ ಬೇಕಾಗುವ ಅನುದಾನವನ್ನು ಕಾಯ್ದಿರಿಸಿಯೇ ಅನುಷ್ಠಾನ ತಂದಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಸರ್ಕಾರವಾಗಲಿ ರಾಜ್ಯವಾಗಲೀ ದಿವಾಳಿಯಾಗಿಲ್ಲ. ಈ ಕಾರ್ಯಕ್ರಮಗಳಿಂದ ಆರ್ಥಿಕವಾಗಿ ಹಿಂದುಳಿದವರು, ಬಡವರು ನಿರ್ಗತಿಕರು ಸಬಲರಾಗಲು ಸಾಧ್ಯವಾಗಿದೆ ಎಂದರು.&lt;/p&gt;&lt;h2&gt;&lt;strong&gt;ಖಾತೆಗೆ ಹಾಕಲಾಗುವುದು&lt;/strong&gt;&lt;/h2&gt;&lt;p&gt;ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿಯ ಹಣ ನಮ್ಮ ರಾಜ್ಯದ ಜನರಿಗೆ ಸಿಗಬೇಕು ಎನ್ನುವುದು ಇಂದಿನ ಮುಖ್ಯಮಂತ್ರಿಗಳ ಉದ್ದೇಶ ಈ ಹಿನ್ನಲೆಯಲ್ಲಿ ಅತಿ ಶೀಘ್ರದಲ್ಲಿಯೇ ಪರಿಷ್ಕರಣೆ ಮಾಡಿ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದರು. ವಿರೋಧ ಪಕ್ಷದ ನಾಯಕರು ಈ ಕಮಿಟಿ ಯಾಕೇ ಬೇಕು ಎಂದು ಪ್ರಶ್ನಿಸಿದ್ದಾರೆ, ಈ ಕಾರ್ಯಕ್ರಮವನ್ನು ಕಂಡು ಹಿಡಿದವರೇ ನಾವು ರಾಜ್ಯದಲ್ಲಿ 4ಸಾವಿರ ಈ ಕಮಿಟಿಯ ಪಡೆ ಇದೆ. ಅಲ್ಲದೆ 5 ಇಲಾಖೆಗಳ ಅಧಿಕಾರಿಗಳ ಸಂಪರ್ಕದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಇದಲ್ಲದೆ ಶೀಘ್ರವಾಗಿ ನೋಂದಣಿಗೆ ಅನುಕೂಲವಾಗಲೆಂದು ಆ್ಯಪ್&zwnj; ವೊಂದನ್ನು ಸೃಷ್ಟಿಸಲಾಗುತ್ತಿದೆ ಎಂದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/karnataka-guarantee-schemes-update-hm-revanna-statement-gvd/articleshow-ya3zxus"/>
        </item>
    </channel>
</rss>
