<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 07 Aug 2026 09:11:35 +0530</lastBuildDate>
        <atom:link href="https://kannada.asianetnews.com/rss/chitradurga" rel="self" type="application/rss+xml"/>
        <item>
            <title><![CDATA[ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್:  6 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!]]></title>
            <link>https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</link>
            <guid isPermaLink="true">https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet</guid>
            <pubDate>Wed, 08 Jul 2026 11:25:56 +0530</pubDate>
            <description><![CDATA[ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಮೆಗಾ ಆಪರೇಷನ್&zwnj;ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx04edrp64anbam01r602epp,imgname-lokayukta-raids-in-across-karnataka-1783489836822.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ರಾಯಚೂರು, ಚಿತ್ರದುರ್ಗ, ಕಲಬುರಗಿ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನೂರಾರು ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ಮೆಗಾ ಆಪರೇಷನ್ ಕೈಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ಧಾರವಾಡ ಮತ್ತು ಶಿವಮೊಗ್ಗ: ಎಸಿಎಫ್ ಕಿರಣ್ ಅಂಗಡಿಗೆ ಶಾಕ್!&lt;/h2&gt;&lt;p&gt;ಶಿವಮೊಗ್ಗದ ಅರಣ್ಯ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಆಗಿ ಸೇವೆ ಸಲ್ಲಿಸುತ್ತಿರುವ ಕಿರಣ್ ಅಂಗಡಿ ಅವರಿಗೆ ಸೇರಿದ ಧಾರವಾಡ ಮತ್ತು ಶಿವಮೊಗ್ಗದ ಒಟ್ಟು ೫ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಧಾರವಾಡದ ಲೋಕಾ ಎಸ್ಪಿ ಸಿದ್ದಲಿಂಗಪ್ಪ ಹಾಗೂ ಶಿವಮೊಗ್ಗದ ಲೋಕಾಯುಕ್ತ ಇನ್&zwnj;ಸ್ಪೆಕ್ಟರ್ ವೀರಬಸಪ್ಪ ಕುಶಲಾಪೂರ ಮತ್ತು ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿರುವ ಐಷಾರಾಮಿ ಮನೆ, ಅಳ್ನಾವರ ರಸ್ತೆಯಲ್ಲಿರುವ ಫಾರ್ಮ್ ಹೌಸ್, ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪತ್ನಿಯ ಹೆಸರಿನಲ್ಲಿದೆ ಎನ್ನಲಾದ ಉದ್ಯಮ) ಹಾಗೂ ಅವರ ಸೋದರ ಮಾವನ ಮನೆಗಳ ಮೇಲೆ ಶೋಧ ನಡೆಸಲಾಗುತ್ತಿದೆ.&lt;/p&gt;&lt;h2&gt;ಶಿವಮೊಗ್ಗದ ಕಚೇರಿ ಮೇಲೂ ದಾಳಿ&lt;/h2&gt;&lt;p&gt;ಇತ್ತ ಶಿವಮೊಗ್ಗದ ಆಲ್ಕೋಳ ರಸ್ತೆಯಲ್ಲಿರುವ ಕಿರಣ್ ಅಂಗಡಿ ಅವರ ಅರಣ್ಯ ಸಂಶೋಧನಾ ಕಚೇರಿಯ ಮೇಲೂ ಲೋಕಾಯುಕ್ತ ತಂಡ ತಪಾಸಣೆ ನಡೆಸುತ್ತಿದೆ. ದಾಳಿಯ ವೇಳೆ ಅಧಿಕಾರಿ ಕಿರಣ್ ಅಂಗಡಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಐದು ಜನರ ಅಧಿಕಾರಿಗಳ ತಂಡ ಸದ್ಯ ದಾಖಲೆಗಳನ್ನು ಜಾಲಾಡುತ್ತಿದೆ.&lt;/p&gt;&lt;h2&gt;ರಾಯಚೂರು: ಕೆಬಿಜೆಎನ್&zwnj;ಎಲ್ ಇಇ ಬಸನಗೌಡಗೆ ಸೇರಿದ 7 ಕಡೆ ದಾಳಿ&lt;/h2&gt;&lt;p&gt;ರಾಯಚೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಇಂಜಿನಿಯರ್ (EE) ಬಸನಗೌಡ ಅವರ ವಿರುದ್ಧ ಲೋಕಾಯುಕ್ತರು ತನಿಖೆ ತೀವ್ರಗೊಳಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ 7 ಪ್ರತ್ಯೇಕ ತಂಡಗಳು ಏಕಕಾಲದಲ್ಲಿ 7 ಕಡೆ ಧಾಳಿ ನಡೆಸಿವೆ. ಬಸನಗೌಡ ಅವರ ರಾಯಚೂರು ನಗರದ ಎಚ್.ಆರ್.ಬಿ ಲೇಔಟ್&zwnj;ನಲ್ಲಿರುವ ಮನೆ, ಯಕ್ಲಾಸಪುರದ ಸೆಲೆಬ್ರಿಟಿ ಗಾರ್ಡನ್&zwnj;ನಲ್ಲಿರುವ ಅಣ್ಣನ ಮನೆ ಹಾಗೂ ಯಕ್ಲಾಪುರದ ತೋಟದ ಮನೆಯಲ್ಲಿ ಶೋಧ ಕಾರ್ಯ ಪ್ರಗತಿಯಲ್ಲಿದೆ.&lt;/p&gt;&lt;h2&gt;ಬಾರ್ ಮತ್ತು ಪೆಟ್ರೋಲ್ ಬಂಕ್ ಪತ್ತೆ&lt;/h2&gt;&lt;p&gt;ಬಸನಗೌಡ ಅವರ ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ನಾಯರಾ ಪೆಟ್ರೋಲ್ ಬಂಕ್, ಅದರ ಪಕ್ಕದಲ್ಲೇ ಇರುವ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಗೋದಾಮಿನ (Warehouse) ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ದೇವದುರ್ಗ ತಾಲೂಕಿನ ಚಿಕ್ಕ ಹೊನ್ನಕುಣಿ ವ್ಯಾಪ್ತಿಯ ಕೆಬಿಜೆಎನ್&zwnj;ಎಲ್ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.&lt;/p&gt;&lt;h2&gt;ಚಿತ್ರದುರ್ಗ ಆರ್&zwnj;ಎಫ್&zwnj;ಒ ಮತ್ತು ಪ್ರೊಫೆಸರ್ ಮನೆಗೆ ಅಧಿಕಾರಿಗಳ ಎಂಟ್ರಿ&lt;/h2&gt;&lt;p&gt;ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಬ್ಬರು ಪ್ರಮುಖ ಅಧಿಕಾರಿಗಳ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ. ಚಿತ್ರದುರ್ಗದ ಧವಳಗಿರಿ ಬಡಾವಣೆಯಲ್ಲಿರುವ ವಲಯ ಅರಣ್ಯಾಧಿಕಾರಿ (RFO) ದುಗ್ಗಪ್ಪ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾಲಯದ ಪ್ರೊಫೆಸರ್ ಶಂಕರ್ ಅವರ ಮನೆ ಹಾಗೂ ತೋಟದ ಮೇಲೂ ಲೋಕಾಯುಕ್ತರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;ಕಲಬುರಗಿ ಜೇಸ್ಕಾಂ ಎಇಇ ಅಮೃತರಾವ್ ಯಲಾಲ್ ಮನೆ, ಫ್ಲ್ಯಾಟ್ ಮೇಲೆ ದಾಳಿ&lt;/h2&gt;&lt;p&gt;ಕಲಬುರಗಿಯಲ್ಲಿ ಜೆಸ್ಕಾಂ (GESCOM) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅಮೃತರಾವ್ ಯಲಾಲ್ ಅವರಿಗೆ ಸೇರಿದ ಕಚೇರಿ ಹಾಗೂ ಮನೆ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ಮಾಡಿದೆ. ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿರುವ ನಿವಾಸ, ಬಸವ ಅಪಾರ್ಟ್&zwnj;ಮೆಂಟ್&zwnj;ನಲ್ಲಿರುವ ಫ್ಲ್ಯಾಟ್, ಮತ್ತು ಕೊತ್ತಂಬರಿ ಲೇಔಟ್&zwnj;ನಲ್ಲಿರುವ ಜೇಸ್ಕಾಂ ಕಚೇರಿಗಳ ಮೇಲೆ ದಾಳಿಯಾಗಿದೆ. ಇದಲ್ಲದೆ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಮನೆಯ ಮೇಲೂ ಅಧಿಕಾರಿಗಳು ಮುಗಿಬಿದ್ದಿದ್ದಾರೆ. ಎಇಇ ಅಮೃತರಾವ್ ಅವರು ಜಾಗೃತಿ ಕಾಲೋನಿಯಲ್ಲಿ 'ಪ್ಲಾಟಿನಂ ಸ್ಟುಡಿಯೋ' ಎಂಬ ಹೈಟೆಕ್ ಸ್ಟುಡಿಯೋ ಹೊಂದಿದ್ದು, ನಂದೂರ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫ್ಲ್ಯಾಟ್ ಹಾಗೂ ವಿವಿಧೆಡೆ 20 ಕ್ಕೂ ಹೆಚ್ಚು ಎಕರೆ ಕೃಷಿ ಜಮೀನು ಹೊಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ತುಮಕೂರು ಸಣ್ಣ ನೀರಾವರಿ ಇಲಾಖೆ ಎಇಇ ಮನೆ ಮೇಲೆ ಲೋಕಾ ದಾಳಿ&lt;/h2&gt;&lt;p&gt;ಸಣ್ಣ ನೀರಾವರಿ ಇಲಾಖೆಯಲ್ಲಿ ಎಇಇ ಆಗಿರುವ ಮಧುಸೂದನ್ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ಮಧುಸೂದನ್ ಮನೆ. ಸಣ್ಣ ನೀರಾವರಿ ಇಲಾಖೆ ತಿಪಟೂರು ಉಪವಿಭಾಗದಲ್ಲಿ ಎಇಇ ಆಗಿ ಕೆಲಸ ಮಾಡುತ್ತಿರುವ ಮಧುಸೂದನ್ ಅಕ್ರಮ ಹಣ ಗಳಿಕೆ ಆರೋಪದಡಿ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಲೋಕಾ ದಾಳಿ. ಮಧುಸೂದನ್ ಮನೆಯನ್ನ ಪರಿಶೀಲನೆ ನಡೆಸುತ್ತಿರುವ ಲೋಕಾ ಟೀಮ್. ಸದ್ಯ ಎಲ್ಲಾ ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದ್ದು, ಚಿನ್ನಾಭರಣ, ನಗದು ಹಾಗೂ ಬ್ಯಾಂಕ್ ಖಾತೆಗಳ ವಿವರಗಳು ಲಭ್ಯವಾಗಬೇಕಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-in-across-karnataka-6-govt-officials-under-radar-multiple-government-engineers-acf-raided-gdp/articleshow-1k8vyet"/>
        </item>
        <item>
            <title><![CDATA[ಚಿತ್ರದುರ್ಗ: ಕತ್ತಿಗೆ ಗ್ರ್ಯಾನೈಟ್ ಕಲ್ಲು ಬಿದ್ದು CUDA ಮಾಜಿ ಅಧ್ಯಕ್ಷರ ಪುತ್ರ ಸಾವು, ಕುಟುಂಬದಿಂದ ಮಗನ ಕಣ್ಣುದಾನ]]></title>
            <link>https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</link>
            <guid isPermaLink="true">https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq</guid>
            <pubDate>Thu, 18 Jun 2026 19:16:35 +0530</pubDate>
            <description><![CDATA[ಚಿತ್ರದುರ್ಗದ ಮಾರ್ಬಲ್ಸ್ ಗೋದಾಮಿನಲ್ಲಿ ಗ್ರ್ಯಾನೈಟ್ ಬಿಲ್ಲೆ ಕುತ್ತಿಗೆ ಮೇಲೆ ಬಿದ್ದು ರಾಣಾ ಪ್ರತಾಪ್ ಸಿಂಹ ಎಂಬ ಯುವಕ ದುರಂತ ಸಾವಿಗೀಡಾಗಿದ್ದಾನೆ. ಈ ದುಃಖದ ನಡುವೆಯೂ, ಮೃತನ ಕುಟುಂಬವು ಆತನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvdevgwcwgcyyz8echjjk5ne,imgname-chitradurga-warehouse-accident-1781789475724.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಕೋಟೆನಾಡು ಚಿತ್ರದುರ್ಗ ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿರುವ ಮಾರ್ಬಲ್ಸ್ ಗೋದಾಮಿನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಗ್ರ್ಯಾನೈಟ್&zwnj;ಗಳನ್ನು ಗೋದಾಮಿಗೆ ಶಿಫ್ಟ್ ಮಾಡುವ ವೇಳೆ ಭಾರಿ ಗಾತ್ರದ ಗ್ರ್ಯಾನೈಟ್ ಬಿಲ್ಲೆಯೊಂದು ಆಕಸ್ಮಿಕವಾಗಿ ಕುತ್ತಿಗೆಯ ಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.&lt;/p&gt;&lt;p&gt;ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರ ಪುತ್ರ ರಾಣಾ ಪ್ರತಾಪ್ ಸಿಂಹ (30) ಮೃತಪಟ್ಟ ದುರ್ದೈವಿ ಯುವಕ. ಈ ಹಠಾತ್ ದುರಂತವು ಮೃತರ ಕುಟುಂಬಸ್ಥರು ಹಾಗೂ ಸ್ನೇಹಿತರ ವಲಯದಲ್ಲಿ ಭಾರೀ ಆಘಾತ ಮೂಡಿಸಿದೆ.&lt;/p&gt;&lt;h2&gt;ದುರಂತ ಸಂಭವಿಸಿದ್ದು ಹೇಗೆ?&lt;/h2&gt;&lt;p&gt;ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ 'ದೇವಿ ಮಾರ್ಬಲ್ಸ್ ಮತ್ತು ಗ್ರ್ಯಾನೈಟ್ಸ್' ಗೋದಾಮಿನಲ್ಲಿ ಈ ದುರ್ಘಟನೆ ನಡೆದಿದೆ. ಗೋದಾಮಿಗೆ ಹೊಸದಾಗಿ ಬಂದಿದ್ದ ಗ್ರ್ಯಾನೈಟ್ ಲೋಡ್ ಅನ್ನು ಕಾರ್ಮಿಕರು ಅನ್ಲೋಡ್ ಮಾಡಿ ಒಳಗೆ ಜೋಡಿಸಿ ಇಡುತ್ತಿದ್ದರು. ಈ ವೇಳೆ ರಾಣಾ ಪ್ರತಾಪ್ ಸಿಂಹ ಅವರು ಗೋದಾಮಿನ ಒಳಗಿನ ಗೋಡೆಯೊಂದರ ಪಕ್ಕದಲ್ಲಿ ನಿಂತು ಗಮನಿಸುತ್ತಿದ್ದರು ಎನ್ನಲಾಗಿದೆ. ದುರದೃಷ್ಟವಶಾತ್, ಗ್ರ್ಯಾನೈಟ್ ಬಿಲ್ಲೆಗಳನ್ನು ಸ್ಥಳಾಂತರಿಸುವಾಗ ನಿಯಂತ್ರಣ ತಪ್ಪಿ ಭಾರಿ ತೂಕದ ಗ್ರ್ಯಾನೈಟ್ ಕಲ್ಲು ನೇರವಾಗಿ ಗೋಡೆ ಬಳಿ ನಿಂತಿದ್ದ ಪ್ರತಾಪ್ ಅವರ ಕುತ್ತಿಗೆಯ ಭಾಗಕ್ಕೆ ಬಿದ್ದಿದೆ. ಕಲ್ಲಿನ ಭೀಕರ ಹೊಡೆತ ಹಾಗೂ ತೂಕಕ್ಕೆ ಕುತ್ತಿಗೆಯ ಭಾಗ ತೀವ್ರವಾಗಿ ಜಜ್ಜಲ್ಪಟ್ಟು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ&lt;/h2&gt;&lt;p&gt;ಆದರ್ಶ ಯುವಕನಾಗಿದ್ದ ಪ್ರತಾಪ್ ಅವರ ಹಠಾತ್ ಸಾವು ತಂದೆ ತಿಪ್ಪೇಸ್ವಾಮಿ ಹಾಗೂ ಇಡೀ ಕುಟುಂಬವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ. ಮಗನನ್ನು ಕಳೆದುಕೊಂಡು ಕಣ್ಣೀರುಡುತ್ತಿದ್ದ ಸಂದರ್ಭದಲ್ಲೂ ಕುಟುಂಬಸ್ಥರು ಅತ್ಯಂತ ಶ್ಲಾಘನೀಯ ಹಾಗೂ ಸಾರ್ಥಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ನಮ್ಮ ಮಗ ಇನ್ನಿಲ್ಲವಾದರೂ ಅವನ ಕಣ್ಣುಗಳು ಮತ್ತೊಬ್ಬರಿಗೆ ಬೆಳಕಾಗಲಿ ಎಂಬ ಉದಾತ್ತ ಚಿಂತನೆಯಿಂದ ಮೃತ ರಾಣಾ ಪ್ರತಾಪ್ ಸಿಂಹ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.&lt;/p&gt;&lt;h2&gt;ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು&lt;/h2&gt;&lt;p&gt;ಘಟನೆ ಸಂಭವಿಸುತ್ತಿದ್ದಂತೆ ವಿಷಯ ತಿಳಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳ ಲೋಪದೋಷಗಳಿದ್ದವೇ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-urban-development-authority-former-chairman-thippeswamy-son-dies-in-granite-warehouse-mishap-gdp/articleshow-543epiq"/>
        </item>
        <item>
            <title><![CDATA[Chitradurga: ಕುಸಿದುಬಿದ್ದು ಹಠಾತ್‌ ಸಾವನ್ನಪ್ಪಿದ ಚಿತ್ರದುರ್ಗದ ಡಿಆರ್‌ಎಫ್ಒ ವೆಂಕಟೇಶ್]]></title>
            <link>https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7</link>
            <guid isPermaLink="true">https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7</guid>
            <pubDate>Wed, 01 Jul 2026 17:41:36 +0530</pubDate>
            <description><![CDATA[&lt;p&gt;ಹಿರಿಯೂರು ತಾಲೂಕಿನ ಡಿಆರ್&zwnj;ಎಫ್&zwnj;ಒ ಆಗಿದ್ದ ವೆಂಕಟೇಶ್ (40) ಚಿತ್ರದುರ್ಗದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದ್ದರಿಂದ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kweseq1jdxpvadt9qyetekj4,imgname-forest-1782907886642.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗ: ಹಿರಿಯೂರು ತಾಲೂಕಿನಲ್ಲಿ ಡಿಆರ್&zwnj;ಎಫ್&zwnj;ಒ ಆಗಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಧಾರುಣ ಅಂತ್ಯ ಕಂಡಿದ್ದಾರೆ. ಆದರೆ ಸಾವಿಗೆ ಏನು ಕಾರಣ ಎನ್ನುವುದು ತಿಳಿಯದ ಕಾರಣ ಪ್ರಕರಣ ಬೇಧಿಸಲು ಖಾಕಿ ಪಡೆ ಸಜ್ಜಾಗಿದೆ. ಅಷ್ಟಕ್ಕೂ ಡಿಆರ್&zwnj;ಎಫ್&zwnj;ಒಗೆ ಆಗಿದ್ದೇನು? ಕುಸಿದು ಬಿದ್ದು ಸಾವನ್ನಪ್ಪಿದ್ದೇಕೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಕುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;h2&gt;&lt;strong&gt;ಯಾರು ಈ ಡಿಆರ್&zwnj;ಎಫ್&zwnj;ಒ?&lt;/strong&gt;&lt;/h2&gt;&lt;p&gt;ಮನುಷ್ಯನ ಜೀವನ ನೀರ ಮೇಲಿನ ಗುಳ್ಳೆಯಂತೆ ಎನ್ನುವುದು ಗಾದೆಯಾದರೂ ಮಾನವ ಬದುಕಿನಲ್ಲಿ ಸಹಜ ಅಳವಡಿಕೆಯಾಗಿದೆ. ಅದೇ ರೀತಿಯಾಗಿಯೆ ನಿಂತ, ನಿಂತಲ್ಲೇ ಒರ್ವ ವ್ಯಕ್ತಿ ಸಾವನಪ್ಪಿದ ಘಟನೆ ಚಿತ್ರದುರ್ಗದಲ್ಲಿ ಜೋಗಿ ಮಟ್ಟಿಯಲ್ಲಿ ಇರುವ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಪೊಲೀಸ ಮೂಲಗಳಿಂದ ತಿಳಿದು ಬಂದಿದೆ. ಹಿರಿಯೂರಲ್ಲಿ ಡಿಆರ್&zwnj;ಎಫ್&zwnj;ಒ ಆಗಿದ್ದ ವೆಂಕಟೇಶ್(40) ಮೃತ ವ್ಯಕ್ತಿ.&amp;nbsp;&lt;/p&gt;&lt;h3&gt;&lt;strong&gt;ಪ್ರಕರಣ ದಾಖಲಾಗಿದ್ದೆಲ್ಲಿ?&lt;/strong&gt;&lt;/h3&gt;&lt;p&gt;ಕುಸಿದು ಬಿದ್ದ ವೆಂಕಟೇಶ್ ಸಾವನ್ನು ಸಹಜವಾಗಿ ಸಾವನ್ನಪ್ಪಿದ್ದ ವೆಂಕಟೇಶ ಅವರ ಪ್ರಕರಣ ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಬಳಿ ದಿಡೀರ್ ಕುಸಿದು ಬಿದ್ದು ದುರ್ಮರಣ ಹೊಂದಿದ್ದ ವೆಂಕಟೇಶ್ ಪ್ರಕರಣದ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎನ್ನುವುದು ಖಾಕಿ ಮೂಲಗಳಿಂದ ತಿಳಿದು ಬಂದಿದೆ.&lt;/p&gt;&lt;h3&gt;&lt;strong&gt;ದಿಗ್ಭ್ರಮೆಗೆ ಒಳಗಾದ ಸಿಬ್ಬಂದಿ!&zwnj;&lt;/strong&gt;&lt;/h3&gt;&lt;p&gt;ಉಪ ವಲಯ ಅರಣ್ಯಾಧಿಕಾರಿಯೊಬ್ಬರು ದಿಢೀರನೆ ಕುಸಿದು ಬಿದ್ದು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಅಧಿಕಾರಿಯ ಹಠಾತ್ ನಿಧನವು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ತೀವ್ರ ದಿಗ್ಭ್ರಮೆ ಮತ್ತು ಆಘಾತ ಮೂಡಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್&zwnj; ಮೂಲ ಹಾಗೂ ಪೋಸ್ಟ್&zwnj; ಮಾಟಂ ನಿಂದ ಬರುವ ರಿಪೋರ್ಟ್ ಮೇಲೆ ಎಲ್ಲರ ಕಣ್ಣು ನೆಟ್ಟಿವೆ.&lt;/p&gt;&lt;h3&gt;&lt;strong&gt;ಕುಟುಂಬದಲ್ಲಿ ಮನೆ ಮಾಡಿದ ಸ್ಮಶಾನ ಮೌನ!&lt;/strong&gt;&lt;/h3&gt;&lt;p&gt;ಇಂದು ಇದ್ದ ವ್ಯಕ್ತಿ ನಾಳೆ ಇಲ್ಲ ಎಂದರೆ, ತಂದೆ-ತಾಯಿಯರಿಗೆ ಮಗ ಬೇಕಾದರೆ, ಇಂದು ಪುಟ್ಟ ಮಕ್ಕಳಿಗೆ ಇಲ್ಲಿ ತಂದೆಯ ಅನಿವಾರ್ಯತೆ ಇದೆ. ಆದ್ದರಿಂದ ಅವರ ಹಠಾತ್&zwnj; ನಿಧನ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಮೌನವಾದ ಮನೆಯಲ್ಲಿ ಇಂದು ಕಣ್ಣೀರಿನ ಹೊಳೆ ಹರಿಯುತ್ತಿದೆ. ಇತ್ತ ಅರಣ್ಯ ಸಿಬ್ಬಂದಿಗಳಿಗೂ ಈ ಶಾಕ್&zwnj; ನಿದ್ದೆಗೆಡಿಸಿದೆ. ಆದ್ದರಿಂದ ಪೊಲೀಸ್&zwnj; ಹಾಗೂ ವೈದ್ಯಕೀಯ ಮೂಲಗಳು ಅವರ ಸಾವಿನ ಕುರಿತು ಏನು ಹೇಳುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>chitradurga</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/chitradurga-drfo-venkatesh-dies-suddenly-after-collapsing/articleshow-5gh7pa7"/>
        </item>
        <item>
            <title><![CDATA[ರೇಣುಕಾಸ್ವಾಮಿ ಕೇಸ್‌: ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣದ ಹಿಂದೆ ಪ್ರಭಾವಿಗಳಿರೋ ಶಂಕೆ? ಡೀಲ್ ಕೊಟ್ಟವರಿಗೂ ನಡುಕ]]></title>
            <link>https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz</link>
            <guid isPermaLink="true">https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz</guid>
            <pubDate>Wed, 08 Jul 2026 12:28:16 +0530</pubDate>
            <description><![CDATA[ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳನ್ನು ಬಂಧಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ. ಪ್ರಭಾವಿಗಳ ಸೂಚನೆ ಮೇರೆಗೆ ನಡೆದಿದೆ ಎನ್ನಲಾದ ಈ 'ಡೀಲ್'ನ ರಹಸ್ಯವನ್ನು ಆರೋಪಿಗಳ ಮೊಬೈಲ್ ಫೋನ್&zwnj;ನ ಎಫ್&zwnj;ಎಸ್&zwnj;ಎಲ್ ವರದಿ ಬಯಲು ಮಾಡುವ ನಿರೀಕ್ಷೆಯಿದೆ, ಇದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01j0q7cynrazcp8gfx4vw71q87,imgname-Renukaswamy-Murder-Case-1718766435000.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ನಟ ದರ್ಶನ್ ಅವರನ್ನು ಈ ಕೊಲೆ ಕೇಸ್&zwnj;ನಿಂದ ಹೇಗಾದರೂ ಮಾಡಿ ಪಾರು ಮಾಡಬೇಕು ಎಂದು ಯಾರದ್ದೋ ಮಾತು ಕೇಳಿ ಸಾಕ್ಷಿಗಳ ನಾಶಕ್ಕೆ ಇಳಿದಿದ್ದ ದರ್ಶನ್ ಅಭಿಮಾನಿ ಸಂಘದ ಪ್ರಮುಖರು ಈಗ ತಾವೇ ಕಾನೂನಿನ ಉರುಳಿಗೆ ಸಿಲುಕಿದ್ದಾರೆ. ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಒಡ್ಡಿ ಸಿಕ್ಕಿಬಿದ್ದಿರುವ ಆರೋಪಿಗಳ ಜಾಲದ ಹಿಂದೆ ಚಿತ್ರರಂಗದ ಪ್ರಭಾವಿ ವ್ಯಕ್ತಿಗಳು ಅಥವಾ ರಾಜಕೀಯದ ಪ್ರಭಾವಿ ವ್ಯಕ್ತಿಗಳು ಇರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದೆ.&lt;/p&gt;&lt;h2&gt;ಸಾಕ್ಷಿ ನಂ. 49 ಸಂದೀಪ್&zwnj;ಗೆ ಬೆದರಿಕೆ ಹಾಕಿದ್ದ ಮೂವರ ಬಂಧನ&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿಯಾಗಿರುವ ಚಿತ್ರದುರ್ಗದ ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್&zwnj;ನ ಕ್ಯಾಷಿಯರ್ ಸಂದೀಪ್&zwnj;ಗೆ ಇತ್ತೀಚೆಗೆ ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಕರೆ ಮಾಡಿಸಲಾಗಿತ್ತು. ನಾವು ಹೇಳಿದಂತೆ ಕೋರ್ಟ್&zwnj;ನಲ್ಲಿ ಸಾಕ್ಷ್ಯ ನುಡಿಯಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಕುರಿತು ಸಂದೀಪ್ ಸ್ವತಃ ನ್ಯಾಯಾಧೀಶರ ಮುಂದೆ ಧೈರ್ಯವಾಗಿ ನನಗೆ ಸುಳ್ಳು ಸಾಕ್ಷಿ ನುಡಿಯುವ ಬೆದರಿಕೆ ಇದೆ ಎಂದು ಜವಾಬ್ದಾರಿ ಹೇಳಿಕೆ ನೀಡಿದ್ದರು.&lt;/p&gt;&lt;p&gt;ವಿಚಾರಣೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಬೆದರಿಕೆ ಹಾಕಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಲು ಮತ್ತು ಸಾಕ್ಷಿಗೆ ಸೂಕ್ತ ರಕ್ಷಣೆ ನೀಡಲು ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಗೆ ಇಳಿದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಟ ದರ್ಶನ್ ಅಭಿಮಾನಿ ಸಂಘದ ಸದಸ್ಯರಾದ ಸುಹಾಸ್, ವೇಣು ಮತ್ತು ಪುನೀತ್ ಎಂಬ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದರು.&lt;/p&gt;&lt;h2&gt;10 ದಿನ ಪೊಲೀಸ್ ಕಸ್ಟಡಿಯಲ್ಲಿ ಪುನೀತ್: ಬಾಯಿ ಬಿಟ್ಟರೆ ಅನಾಹುತ!&lt;/h2&gt;&lt;p&gt;ಬಂಧಿತರ ಪೈಕಿ ತೀವ್ರ ವಿಚಾರಣೆಗೆ ಒಳಗಾಗಿರುವ ದಾಸನ ಅಭಿಮಾನಿ ಪುನೀತ್ ನನ್ನು ಪೊಲೀಸರು ಸದ್ಯ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ. ಈ ಪುನೀತ್ ಪೊಲೀಸರ ಮುಂದೆ ನಿರಂತರವಾಗಿ ಮರು ಹೇಳಿಕೆಗಳನ್ನು ದಾಖಲಿಸುತ್ತಿದ್ದಾನೆ. ಸದ್ಯದ ಮಾಹಿತಿ ಪ್ರಕಾರ, ಈತ ಯಾರೋ ಪ್ರಭಾವಿಗಳ ಸೂಚನೆ ಮೇರೆಗೆ ಈ ಇಡೀ ಸಾಕ್ಷಿ ನಾಶದ &lsquo;ಡೀಲ್&rsquo; ಕುದುರಿಸಲು ಮುಂದಾಗಿದ್ದ ಎನ್ನಲಾಗಿದೆ. 10 ದಿನಗಳ ಈ ಸುದೀರ್ಘ ವಿಚಾರಣೆಯಲ್ಲಿ ಪುನೀತ್ ಅಸಲಿ ಸತ್ಯವನ್ನು ಬಾಯಿ ಬಿಟ್ಟರೆ, ಈ ಡೀಲ್ ಕುದುರಿಸಲು ಹಣದ ಆಮಿಷ ಒಡ್ಡಿದ ದೊಡ್ಡ ವ್ಯಕ್ತಿಗಳಿಗೆ ನೇರ ಸಂಕಷ್ಟ ಅಂತು ಕಟ್ಟಿಟ್ಟ ಬುತ್ತಿ.&lt;/p&gt;&lt;h2&gt;ಕಾನ್ಫರೆನ್ಸ್ ಕಾಲ್ ರಹಸ್ಯ ಬಿಚ್ಚಿಡಲಿದೆ ಎಫ್&zwnj;ಎಸ್&zwnj;ಎಲ್ (FSL) ವರದಿ&lt;/h2&gt;&lt;p&gt;ಸಾಕ್ಷಿಗೆ ಬೆದರಿಕೆ ಹಾಕಲು ಆರೋಪಿಗಳು ಬಳಸಿದ್ದ ಮೊಬೈಲ್ ಫೋನ್&zwnj;ಗಳನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮೊಬೈಲ್&zwnj;ನಿಂದ ಡಿಲೀಟ್ ಮಾಡಲಾಗಿರುವ ಕರೆಗಳ ವಿವರ, ವಾಟ್ಸಾಪ್ ಚಾಟ್&zwnj;ಗಳು ಮತ್ತು ಪ್ರಮುಖ ಆಡಿಯೋ ರೆಕಾರ್ಡಿಂಗ್&zwnj;ಗಳನ್ನು ಮರುಪಡೆಯುವ (Retrieve) ಪ್ರಕ್ರಿಯೆ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಂಪೂರ್ಣ ವರದಿ ಪೊಲೀಸರ ಕೈಸೇರಲಿದೆ. ಸಾಕ್ಷಿಗೆ ಬೆದರಿಕೆ ಹಾಕುವ ಸಮಯದಲ್ಲಿ ಈ ಆರೋಪಿಗಳ ಜೊತೆ ಕಾನ್ಫರೆನ್ಸ್ ಕಾಲ್&zwnj;ನಲ್ಲಿ ಇನ್ನು ಯಾರ್ಯಾರು ಸಂಪರ್ಕದಲ್ಲಿದ್ದರು? ಬೆಂಗಳೂರಿನಿಂದ ಯಾರಾದರೂ ಇವರಿಗೆ ಇನ್ಸ್ಟ್ರಕ್ಷನ್ ನೀಡುತ್ತಿದ್ದರೇ? ಎಂಬುದನ್ನು ಎಫ್&zwnj;ಎಸ್&zwnj;ಎಲ್ ಪತ್ತೆ ಹಚ್ಚಲಿದೆ.&lt;/p&gt;&lt;h2&gt;ಡೀಲ್ ಕುದುರಿಸಿದವರಿಗೆ ಶುರುವಾಗಿದೆ ನಡುಕ!&lt;/h2&gt;&lt;p&gt;ಎಫ್&zwnj;ಎಸ್&zwnj;ಎಲ್&zwnj;ನಿಂದ ತಾಂತ್ರಿಕ ಸಾಕ್ಷ್ಯಗಳು ಕೈ ಸೇರಿದ ತಕ್ಷಣವೇ, ಈ ಇಡೀ ಸಾಕ್ಷಿ ಬೆದರಿಕೆ ಪ್ರಕರಣದ ಹಿಂದೆ ನಿಂತು ಹಣದ ಹರಿವು ಹಾಗೂ ತಂತ್ರ ರೂಪಿಸಿದ ದೊಡ್ಡ ತಲೆಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಲಿದ್ದಾರೆ. ನೋಟಿಸ್ ನೀಡಿದ ಬಳಿಕ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಮುಖಾಮುಖಿ ವಿಚಾರಣೆ ನಡೆಸಲು ಕಾಮಾಕ್ಷಿಪಾಳ್ಯ ಪೊಲೀಸರು ಯೋಜನೆ ರೂಪಿಸಿದ್ದಾರೆ.&lt;/p&gt;&lt;p&gt;ದರ್ಶನ್ ರಕ್ಷಣೆಗಾಗಿ ಕೋಟಿ ಕೋಟಿ ಹಣ ಹಿಡಿದು ಡೀಲ್ ಮಾಡಲು ಹೊರಟಿದ್ದ ಪ್ರಭಾವಿ ವಲಯದಲ್ಲಿ ಈಗ ತೀವ್ರ ನಡುಕ ಮತ್ತು ಆತಂಕ ಮನೆಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್&zwnj;ನ ಸೈಡ್ ಟ್ರ್ಯಾಕ್&zwnj;ನಲ್ಲಿ ಆರಂಭವಾಗಿರುವ ಈ ಬೆದರಿಕೆ ಪ್ರಕರಣ, ಅಸಲಿ ಕೊಲೆ ಪ್ರಕರಣಕ್ಕಿಂತಲೂ ದೊಡ್ಡ ತಿರುವು ಪಡೆಯುವ ಮುನ್ಸೂಚನೆ ಸಿಗುತ್ತಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/renukaswamy-case-darshan-aides-arrested-for-threatening-witness-fsl-to-uncover-big-names-in-witness-deal-gdp/articleshow-7m26gyz"/>
        </item>
        <item>
            <title><![CDATA[ಬುರುಡೆ ಪ್ರಕರಣ: ಕೋಟಿಗೆ ಎಷ್ಟು ಸೊನ್ನೆ ಇದೆ ಎಂದೇ ಗೊತ್ತಿಲ್ಲ, ನನ್ನ ವಿರುದ್ಧದ ಷಡ್ಯಂತ್ರ ಬಯಲಾಗಿದೆ: ರಮಾ ನಾಗರಾಜ್!]]></title>
            <link>https://kannada.asianetnews.com/karnataka-districts/activist-rama-nagaraj-addressing-the-press-conference-in-chitradurga-regarding-the-saujanya-case-legal-victory-gdp/articleshow-8uggyha</link>
            <guid isPermaLink="true">https://kannada.asianetnews.com/karnataka-districts/activist-rama-nagaraj-addressing-the-press-conference-in-chitradurga-regarding-the-saujanya-case-legal-victory-gdp/articleshow-8uggyha</guid>
            <pubDate>Sat, 01 Aug 2026 15:53:47 +0530</pubDate>
            <description><![CDATA[ಸೌಜನ್ಯ ಪ್ರಕರಣದಲ್ಲಿ ವಿದೇಶಿ ಫಂಡಿಂಗ್ ಪಡೆದ ಸುಳ್ಳು ಆರೋಪ ಎದುರಿಸುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್&zwnj; ಅವರಿಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಗ್ರಾಮಾಭಿವೃದ್ಧಿ ಸಂಘಗಳ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಈ ಆರೋಪ ಮಾಡಲಾಗಿತ್ತು ಎಂದ ಅವರು, ಸತ್ಯಕ್ಕಾಗಿ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಿರೋಧಿಗಳಿಗೆ ಎಚ್ಚರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kyyd8kn2j50657jtfqpmc47d,imgname-activist-rama-nagaraj-1785579458210.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ನಾವು ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವವರು. ನಾವು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ಸತ್ಯದ ಹಾದಿಯಲ್ಲಿ ನಡೆಯುವ ನಮಗೆ ಕಾನೂನಿನ ಮೇಲೆ ಅಪಾರ ಗೌರವವಿದ್ದು, ನ್ಯಾಯಾಲಯ ನಮಗೆ ಸೂಕ್ತ ನ್ಯಾಯ ಒದಗಿಸಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್&zwnj; ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿರೋಧಿಗಳ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ತಮ್ಮ ಮೇಲಾಗಿದ್ದ ಸುಳ್ಳು ದೂರುಗಳು ಹಾಗೂ ಕಾನೂನು ಹೋರಾಟದ ಹಾದಿಯನ್ನು ಸುದೀರ್ಘವಾಗಿ ಹಂಚಿಕೊಂಡರು.&lt;/p&gt;&lt;h2&gt;ಸುಖಾಸುಮ್ಮನೆ ಕೋಟಿಗಟ್ಟಲೆ ಫಂಡಿಂಗ್ ಆರೋಪ!&lt;/h2&gt;&lt;p&gt;ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಎಂಬಾತ ತಾನಾಗಿಯೇ ಬಂದು ಶರಣಾಗಿದ್ದ. ಆ ಬಳಿಕ ಆತ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣವರ್ ಹಾಗೂ ನನ್ನನ್ನೂ ಒಳಗೊಂಡಂತೆ ಐದು ಜನರ ಮೇಲೆ ಕೋಟಿಗಟ್ಟಲೆ ವಿದೇಶಿ ಫಂಡಿಂಗ್ ಪಡೆಯುತ್ತಿದ್ದೇವೆ ಎಂದು ಸುಖಾಸುಮ್ಮನೆ ಸುಳ್ಳು ಆರೋಪ ಹೊರಿಸಿದ್ದ. ಅಷ್ಟೇ ಅಲ್ಲದೆ, ನನ್ನ ಬ್ಯಾಂಕ್ ಖಾತೆಯಿಂದ ಆತನ ಪತ್ನಿಯ ಖಾತೆಗೆ ಹಣ ವರ್ಗಾವಣೆಯಾಗಿದೆ ಎಂದೂ ಸುಳ್ಳು ಹೇಳಿದ್ದ. ಕೋಟಿಗೆ ಎಷ್ಟು ಸೊನ್ನೆ ಇರುತ್ತದೆ ಎಂಬುದೇ ನನಗೆ ಗೊತ್ತಿಲ್ಲ. ಅಂತಹದರಲ್ಲಿ ಈ ರೀತಿ ಆಧಾರರಹಿತ ಆರೋಪ ಮಾಡಿದಾಗ, ನಾನು ನ್ಯಾಯಾಲಯದಲ್ಲೇ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ ಎಂದು ಸವಾಲು ಹಾಕಿದ್ದೆ. ನಾನು ಯಾವುದೇ ತಪ್ಪು ಮಾಡದೇ ಇರುವುದರಿಂದ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ರಮಾ ನಾಗರಾಜ್ ಗುಡುಗಿದರು.&lt;/p&gt;&lt;h2&gt;ಗ್ರಾಮಾಭಿವೃದ್ಧಿ ಸಂಘಗಳ ದೌರ್ಜನ್ಯದ ವಿರುದ್ಧ ಧ್ವನಿ&lt;/h2&gt;&lt;p&gt;ಹಳ್ಳಿಗಳಲ್ಲಿ ನಡೆಯುತ್ತಿರುವ ಶೋಷಣೆಯ ವಿರುದ್ಧ ಧ್ವನಿ ಎತ್ತಿದ್ದೇ ಈ ಎಲ್ಲಾ ಆರೋಪಗಳಿಗೆ ಕಾರಣ ಎಂದು ವಿವರಿಸಿದ ಅವರು, ಇಂದು ಹಳ್ಳಿ ಹಳ್ಳಿಗಳಲ್ಲಿ ಗ್ರಾಮಾಭಿವೃದ್ಧಿ ಸಂಘಗಳ ಹೆಸರಿನಲ್ಲಿ ಹೆಣ್ಣುಮಕ್ಕಳು ಬೀದಿಗೆ ಬರುವಂತಾಗಿದೆ. ಮಹಿಳೆಯರು ಕೇಳದಿದ್ದರೂ ಇವರೇ ಮನೆ ಬಾಗಿಲಿಗೆ ಹೋಗಿ ಸಾಲ ಕೊಟ್ಟು, ನಂತರ ಅದನ್ನು ವಸೂಲಿ ಮಾಡುವಾಗ ಅತಿಯಾದ ಮಾನಸಿಕ ಕಿರುಕುಳ (ಟಾರ್ಚರ್) ನೀಡುತ್ತಾರೆ. ಹೆಣ್ಣುಮಕ್ಕಳು ಇದುವರೆಗೆ ಕಟ್ಟಿರುವ ಉಳಿತಾಯದ ಹಣ ಎಷ್ಟು ಎಂಬುದನ್ನು ಕೇಳುವುದೇ ತಪ್ಪಾ? ಈ ದೌರ್ಜನ್ಯವನ್ನು ಪ್ರಶ್ನಿಸಿ, ಸಂತ್ರಸ್ತರ ಪರವಾಗಿ ನಾನು ಪೊಲೀಸ್ ದೂರು ಕೊಡಿಸಿದ್ದಕ್ಕೆ ಸುಮಾರು ೫೦ ಜನ ನನ್ನ ಮೇಲೆಯೇ ದಾಳಿ ಮಾಡಲು ಬಂದಿದ್ದರು ಎಂದು ಘಟನೆಯನ್ನು ನೆನಪಿಸಿಕೊಂಡರು.&lt;/p&gt;&lt;p&gt;&quot;ನಾವು ಕಾನೂನುಬದ್ಧವಾಗಿ ಹೋರಾಟಕ್ಕೆ ಇಳಿದಾಗ, ತಡೆದುಕೊಳ್ಳಲಾರದ ಸಂಘಟನೆಯ ಪ್ರಮುಖರು ಚಿನ್ನಯ್ಯನ ಹೆಗಲ ಮೇಲೆ ಬಂದೂಕಿಟ್ಟು ನಮ್ಮ ವಿರುದ್ಧ ಈ ರೀತಿಯ ಸುಳ್ಳು ಹೇಳಿಕೆಗಳನ್ನು ಕೊಡಿಸಿದರು. ಏಕಾಏಕಿ ಈ ಪ್ರಕರಣದಲ್ಲಿ ನನ್ನ ಹೆಸರನ್ನು ಮುನ್ನೆಲೆಗೆ ತರಲಾಯಿತು.&quot;&lt;/p&gt;&lt;h2&gt;ಸುಪ್ರೀಂ ಕೋರ್ಟ್&zwnj;ನಲ್ಲಿ ಜಯ; ಕಾನೂನಿಗೆ ಗೌರವ&lt;/h2&gt;&lt;p&gt;ಸುಳ್ಳು ಆರೋಪಗಳ ವಿರುದ್ಧ ಸುದೀರ್ಘ ಕಾನೂನು ಹೋರಾಟ ನಡೆಸಿದ ರಮಾ ನಾಗರಾಜ್ ಅವರಿಗೆ ನ್ಯಾಯಾಲಯದಲ್ಲಿ ದೊಡ್ಡ ಜಯ ಸಿಕ್ಕಿದೆ. ಈ ಬಗ್ಗೆ ಸಂತಸ ಹಂಚಿಕೊಂಡ ಅವರು, ನಮ್ಮ ನಿರಂತರ ಹೋರಾಟಕ್ಕೆ ನ್ಯಾಯ ಸಿಕ್ಕಿದ್ದು, ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ನ್ಯಾಯಾಲಯ ನಮ್ಮನ್ನು ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ನನ್ನ ತಂದೆಯೂ ಒಬ್ಬ ನ್ಯಾಯಾಧೀಶರಾಗಿದ್ದರು. ಅವರ ಮಗಳಾಗಿ ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸದಾ ಪರಮ ಗೌರವವಿದೆ. ಸುಪ್ರೀಂ ಕೋರ್ಟ್&zwnj;ನಲ್ಲಿ ನನ್ನ ಪರವಾಗಿ ಹಿರಿಯ ವಕೀಲರಾದ ಬಾಲನ್ ಅವರು ಹಾಗೂ ಬೃಂದಾ ಅವರ ತಂಡ ಅತ್ಯಂತ ಸಮರ್ಥವಾಗಿ ವಾದ ಮಂಡಿಸಿತ್ತು. ಇವರೆಲ್ಲರ ಅವಿರತ ಶ್ರಮದಿಂದ ನಮಗೆ ಇಂದು ಜಯ ಸಿಕ್ಕಿದೆ. ತಪ್ಪು ಮಾಡದವರಿಗೆ ಎಂದಿಗೂ ಕೆಟ್ಟದ್ದಾಗುವುದಿಲ್ಲ ಎಂಬುದಕ್ಕೆ ಈ ತೀರ್ಪೇ ಸಾಕ್ಷಿ ಎಂದರು.&lt;/p&gt;&lt;h2&gt;ಹೆಣ್ಣುಮಕ್ಕಳು ಹೋರಾಟಕ್ಕೆ ಇಳಿದರೆ ಹಿಂದೆ ಸರಿಯಲ್ಲ!&lt;/h2&gt;&lt;p&gt;ಕೊನೆಯದಾಗಿ ಎಚ್ಚರಿಕೆಯ ಸಂದೇಶ ನೀಡಿದ ಅವರು, ಯಾರಾದರೂ ನನ್ನ ತಂಟೆಗೆ ಬಂದರೆ ಅಥವಾ ಸತ್ಯದ ಹಾದಿಯನ್ನು ಕೆಡಿಸಲು ಬಂದರೆ ನಾನು ಮಾತ್ರ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಒಮ್ಮೆ ಹೆಣ್ಣುಮಕ್ಕಳು ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿದರೆ, ಸಾವು ಬರುವವರೆಗೂ ಹೋರಾಡಲು ಸಿದ್ಧರಿರುತ್ತಾರೆ ಎಂಬುದನ್ನು ವಿರೋಧಿಗಳು ನೆನಪಿನಲ್ಲಿಡಬೇಕು ಎಂದು ರಮಾ ನಾಗರಾಜ್&zwnj; ಎಚ್ಚರಿಸಿದರು.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/activist-rama-nagaraj-addressing-the-press-conference-in-chitradurga-regarding-the-saujanya-case-legal-victory-gdp/articleshow-8uggyha"/>
        </item>
        <item>
            <title><![CDATA[ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ರಮ್ಯಾ.ಎಸ್ ವರ್ಗಾವಣೆ; ಕೆಲವೇ ಗಂಟೆಗಳಲ್ಲಿ ಆದೇಶ ವಾಪಸ್ ಪಡೆದ ಸರ್ಕಾರ!]]></title>
            <link>https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti</link>
            <guid isPermaLink="true">https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti</guid>
            <pubDate>Fri, 03 Jul 2026 20:40:20 +0530</pubDate>
            <description><![CDATA[&lt;p&gt;ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಎಸ್. ರಮ್ಯಾ ಅವರ ವರ್ಗಾವಣೆ ಆದೇಶವನ್ನು ಕೆಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಇದೀಗ ವರ್ಗಾವಣೆ ಹಿಂಪಡೆಯಲಾಗಿದ್ದು, ಟಿ. ವೆಂಕಟೇಶ್ ಅವರೇ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwm8exwmnn84nd9j6r6hkn9a,imgname-chitradurga-dc-venkatesh-and-ramya-s-transfer-1783091394452.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜು.03): ಕ&lt;/strong&gt;ರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಎಸ್. ರಮ್ಯಾ (Ramya S) ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ(Chitradurga DC) ವರ್ಗಾವಣೆ ಮಾಡಿದ ಕೆಲವೇ ಗಂಟೆಗಳಲ್ಲಿರಾಜ್ಯ ಸರ್ಕಾರ ಟ್ರಾನ್ಸ್&zwnj;ಫರ್ ರದ್ದುಗೊಳಿಸಿ (Order Cancelled) ಆದೇಶವನ್ನು ವಾಪಸ್ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಅವರು ಕವಿಕಾ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಮುಂದುವರೆಯಲಿದ್ದಾರೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಜುಲೈ 3ರಂದು ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ (Kavika) ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ರಮ್ಯ ಎಸ್. (IAS: 2013) ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆ (Notification) ಹೊರಡಿಸಲಾಗಿತ್ತು.&lt;/p&gt;&lt;h2&gt;&lt;strong&gt;ಆದೇಶ ರದ್ದಾಗಲು ಕಾರಣವೇನು?&lt;/strong&gt;&lt;/h2&gt;&lt;p&gt;ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮತ್ತೊಂದು ಪತ್ರ ಹೊರಬಿದ್ದಿದೆ. ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision - SSR) ಕಾರ್ಯ ಜಾರಿಯಲ್ಲಿದೆ. ಭಾರತ ಚುನಾವಣಾ ಆಯೋಗದ (Election Commission of India) ಕಟ್ಟುನಿಟ್ಟಿನ ನಿರ್ದೇಶನದಂತೆ, ಮತದಾರರ ಪಟ್ಟಿ ಪರಿಷ್ಕರಣೆ ಕೆಲಸ ನಡೆಯುತ್ತಿರುವಾಗ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು (ಜಿಲ್ಲಾ ಚುನಾವಣಾಧಿಕಾರಿಗಳು) ಆಯೋಗದ ಪೂರ್ವ ಅನುಮತಿ ಇಲ್ಲದೆ ವರ್ಗಾವಣೆ ಮಾಡುವಂತಿಲ್ಲ.&lt;/p&gt;&lt;p&gt;ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಭಾರತ ಚುನಾವಣಾ ಆಯೋಗದ ಸಹಮತಿ (Concurrence) ಪಡೆದಿರಲಿಲ್ಲ. ಇದು ಆಯೋಗದ ನಿಯಮಗಳ ನೇರ ಉಲ್ಲಂಘನೆಯಾದ ಕಾರಣ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಈ ಹಿನ್ನೆಲೆಯಲ್ಲಿ, ಸರ್ಕಾರವು ತನ್ನ ವರ್ಗಾವಣೆ ಆದೇಶವನ್ನು ಹಿಂಪಡೆದಿದೆ.&lt;/p&gt;&lt;h2&gt;&lt;strong&gt;ಪರಿಣಾಮವೇನು?&lt;/strong&gt;&lt;/h2&gt;&lt;p&gt;ಈ ದಿಢೀರ್ ಬೆಳವಣಿಗೆಯಿಂದಾಗಿ ಟಿ. ವೆಂಕಟೇಶ್ ಅವರೇ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ. ರಮ್ಯ ಎಸ್. ಅವರಿಗೆ ಅಧಿಕಾರ ವಹಿಸಿಕೊಡದಂತೆ (Relieving) ಸರ್ಕಾರ ಸೂಚನೆ ನೀಡಿದೆ. ಆಡಳಿತಾತ್ಮಕವಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ನಡೆದ ಈ ಎಡವಟ್ಟು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗದ ನಿಯಮಗಳನ್ನು ಗಮನಿಸದೆಯೇ ಸರ್ಕಾರ ಈ ನಿರ್ಧಾರ ಕೈಗೊಂಡಿತೇ ಎಂಬ ಪ್ರಶ್ನೆಗಳು ಎದ್ದಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chitradurga-dc-venkatesh-transfer-order-cancelled-eci-rules-violation-ramya-s-ias/articleshow-9cy6xti"/>
        </item>
        <item>
            <title><![CDATA[ಕತ್ತಲಲ್ಲಿ ಟಾರ್ಚ್ ಹಿಡಿದು ಆರ್‌. ಆಶೋಕ್‌ ದೇವರ ಎತ್ತುಗಳ ವೀಕ್ಷಣೆ, BJP ಬರ ಅಧ್ಯಯನ]]></title>
            <link>https://kannada.asianetnews.com/karnataka-districts/chitradurga-opposition-leader-r-ashok-watch-devara-ettugalu-with-a-torch-in-the-night-bjp-s-drought-study-mrq/articleshow-b9pxrfo</link>
            <guid isPermaLink="true">https://kannada.asianetnews.com/karnataka-districts/chitradurga-opposition-leader-r-ashok-watch-devara-ettugalu-with-a-torch-in-the-night-bjp-s-drought-study-mrq/articleshow-b9pxrfo</guid>
            <pubDate>Fri, 31 Jul 2026 14:33:07 +0530</pubDate>
            <description><![CDATA[ಬರ ಅಧ್ಯಯನಕ್ಕಾಗಿ ಮೊಳಕಾಲ್ಮೂರಿಗೆ ಆಗಮಿಸಿದ ವಿಪಕ್ಷ ನಾಯಕ ಆರ್. ಅಶೋಕ್, ರಾತ್ರಿ ವೇಳೆ ಟಾರ್ಚ್ ಬೆಳಕಿನಲ್ಲಿ ದೇವರ ಎತ್ತುಗಳನ್ನು ವೀಕ್ಷಿಸಿದರು. ಅವರ ಈ ಕತ್ತಲ ಭೇಟಿಯು, ತಮ್ಮ ಸಮಸ್ಯೆಗಳನ್ನು ತೋಡಿಕೊಳ್ಳಲು ಕಾದಿದ್ದ ಸ್ಥಳೀಯ ರೈತರಲ್ಲಿ ತೀವ್ರ ಬೇಸರವನ್ನುಂಟುಮಾಡಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kyvpa2dwvv6afx487gnacv7t,imgname-r-ashok-1785488279996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ:&lt;/strong&gt; ಬರ ಅಧ್ಯಯನಕ್ಕೆಂದು ತಾಲೂಕಿಗೆ ಆಗಮಿಸಿದ್ದ ವಿರೋಧ ಪಕ್ಷದ ನಾಯಕ ಆ&zwnj;ರ್.ಅಶೋಕ ನೇತೃತ್ವದ ತಂಡ ತಾಲೂಕಿ ನಮುತ್ತಿಗಾರಹಳ್ಳಿ ದೇವರ ಎತ್ತುಗಳ ಸ್ಥಳಕ್ಕೆ ಬುಧವಾರ ರಾತ್ರಿ ಆಗಮಿಸಿ ಕತ್ತಲಲ್ಲಿ ಬ್ಯಾಟರಿ ಹಿಡಿದು ದೇವರ ಎತ್ತುಗಳ ಪರಿಸ್ಥಿತಿ ವೀಕ್ಷಣೆ ಮಾಡಿ ಕೆಲವೇ ಕೆಲವು ನಿಮಿಷಗಳಲ್ಲಿ ನಿರ್ಗಮಿಸಿದ್ದು ರೈತರ ಬೇಸರಕ್ಕೆ ಕಾರಣವಾಯಿತು.&lt;/p&gt;&lt;h2&gt;&lt;strong&gt;ಬ್ಯಾಟರಿ ಹಿಡಿದುಕೊಂಡು ಬರ ವೀಕ್ಷಣೆ&lt;/strong&gt;&lt;/h2&gt;&lt;p&gt;ಸದಾ ಬರಕ್ಕೆ ತುತ್ತಾಗುವ ಶಾಶ್ವತ ಬರಪೀಡಿತ ಪ್ರದೇಶವಾಗಿರುವ ಈ ಭಾಗದಲ್ಲಿ ಈ ವರ್ಷವೂ ಮಳೆ ಬಾರದೆ ಬದುಕು ಸಂಕಷ್ಟವಾಗಿದೆ. ಜಾನುವಾರುಗಳ ಪೋಷಣೆ ಕಷ್ಟವಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಬರುತ್ತಾರೆ. ಅವರ ಬಳಿ ಹೇಳಿಕೊಳ್ಳಬೇಕೆಂದು ಸಾವಿರಾರು ಸಮಸ್ಯೆಗಳನ್ನು ಹರವಿಕೊಂಡು ಕುಳಿತಿದ್ದ ನಮಗೆ ಅವರು ಕತ್ತಲಲ್ಲಿ ಬಂದಿದ್ದು ಬೇಸರವಾಯಿತು. ಬೆಳಕಿನಲ್ಲಿ ಬಂದಿದ್ದರೆ ನಮ್ಮಕಷ್ಟಗಳನ್ನು ತೋಡಿಕೊಳ್ಳುತ್ತಿದ್ದೆವು. ಬಿತ್ತನೆ ಆಗದಿರುವುದನ್ನು, ಬೆಳೆ ಒಣಗುತ್ತಿರುವುದನ್ನು ತೋರಿಸುತ್ತಿದ್ದೆವು. ರಾತ್ರಿ ಬಂದು ಬ್ಯಾಟರಿ ಹಿಡಿದುಕೊಂಡು ಬರ ವೀಕ್ಷಣೆ ಮಾಡಿದರೆ ಅವರಿಗೆ ಸಮಸ್ಯೆ ಅರ್ಥವಾಗುವುದೆಂತು ಎಂದು ಅಲ್ಲಿದ್ದವರಿಂದ ಅಳಲು ಕೇಳಿಬಂತು.&lt;/p&gt;&lt;h3&gt;&lt;strong&gt;ದೇವರ ಎತ್ತುಗಳ ಪೋಷಕರಿಂದ ಮನವಿ&lt;/strong&gt;&lt;/h3&gt;&lt;p&gt;ದೇವರ ಎತ್ತುಗಳ ದೂಡುವ ದೊಡ್ಡಿಗೆ ಬುಧವಾರ ರಾತ್ರಿ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರಿಗೆ ಅಲ್ಲಿನ ಕಿಲಾರಿಗಳು (ದೇವರ ಎತ್ತುಗಳ ಪೋಷಕರು) ಮನವಿ ನೀಡಿ, ಮ್ಯಾಸ ನಾಯಕರು ಬುಡಕಟ್ಟು ಹಿನ್ನೆಲೆಯಿಂದ ಬಂದವರು. ಇಂದಿಗೂ ಬುಡಕಟ್ಟು ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ತಲೆ ತಲಾಂತರದಿಂದ ಇಲ್ಲಿನ ದೇವರ ಎತ್ತುಗಳನ್ನು ದೇವರೆಂದು ಪೂಜಿಸಿಕೊಂಡಿದ್ದೇವೆ. ತಾಲೂಕು ಸದಾ ಬರಕ್ಕೆ ತುತ್ತಾಗುತ್ತಿದೆ. ದೇವರ ಎತ್ತುಗಳ ಪೋಷಣೆ ಕಷ್ಟವಾಗುತ್ತಿದೆ. ನಮಗೆ ಪ್ರತ್ಯೇಕ ಗೋಶಾಲೆ ಮತ್ತು ಮೇವು ಬೆಳೆಯಲು ಗೋಮಾಳ ಜಮೀನು ನೀಡಬೇಕು ಎಂದು ಒತ್ತಾಯಿಸಿ ಮನವಿ ನೀಡಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹುಬ್ಬಳ್ಳಿ: 101 ವರ್ಷ ವಯಸ್ಸು, 40 ನಿಮಿಷದ ಸರ್ಜರಿ, ಮರುದಿನ ಡಿಸ್ಚಾರ್ಜ್! ದೇಶದ ಮೊದಲ ಯಶಸ್ವಿ ಕೀಲು ಚಿಕಿತ್ಸೆ!&lt;/strong&gt;&lt;/p&gt;&lt;p&gt;ಈ ಸಂದರ್ಭದಲ್ಲಿ ಶಾಸಕ ಬೈರತಿ ಬಸವರಾಜ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ. ಮಂಜುನಾಥ್&zwnj;, ಕ್ಷೇತ್ರಾಧ್ಯಕ್ಷ ಕೆ.ಟಿ.ಶ್ರೀರಾಮರೆಡ್ಡಿ, ನೇರ್ಲಹಳ್ಳಿ ಪ್ರಭಾಕರ್, ಪ್ರಭಾಕರ್, ಹರೀಶ್ ಕಡೆತೋಟ ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಚಿತ್ರದುರ್ಗ: 'ದೇವರ ಕೋಣ'ದ ಪ್ರಾಣ ಉಳಿಸಿದ ಯಶಸ್ವಿ ರುಮಿನೊಟಮಿ ಶಸ್ತ್ರಚಿಕಿತ್ಸೆ, ಹೊಟ್ಟೆಯಿಂದ 6 ಬಕೆಟ್ ಕೊಳೆತ ಆಹಾರ ತೆಗೆದ ವೈದ್ಯರು!&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮುತ್ತಿಗಾರಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲನೆ ಪ್ರವಾಸದ ಸಂದರ್ಭದಲ್ಲಿ ಇಂದು ಮ್ಯಾಸ ನಾಯಕ (ಮ್ಯಾಸ ಬೇಡ) ಸಮುದಾಯದ ಹಿರಿಯರನ್ನು ಬೇಟಿ ಮಾಡಲಾಯಿತುಮ್ಯಾಸ ನಾಯಕರ ಪಾಲಿಗೆ ದೇವರ ಎತ್ತುಗಳು ಕೇವಲ ಜಾನುವಾರುಗಳಲ್ಲ&hellip; ಅವು ಅವರ ನಂಬಿಕೆ, ಆರಾಧನೆ, ಸಂಸ್ಕೃತಿ ಮತ್ತು ತಲೆತಲಾಂತರಗಳಿಂದ ಬಂದಿರುವ&hellip; pic.twitter.com/jAFuNoj2L8&lt;/p&gt;&lt;p&gt;&mdash; R. Ashoka (@RAshokaBJP) July 29, 2026&lt;/p&gt;&lt;p&gt;&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chitradurga-opposition-leader-r-ashok-watch-devara-ettugalu-with-a-torch-in-the-night-bjp-s-drought-study-mrq/articleshow-b9pxrfo"/>
        </item>
        <item>
            <title><![CDATA[ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಯುವಕನಿಂದ ಹಲ್ಲೆ, ಪೊಲೀಸ್ ಠಾಣೆಯಲ್ಲೂ ಶ್ರೀಗಳ ಎದೆಗೆ ಒದ್ದು ದಾಂಧಲೆ!]]></title>
            <link>https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp</link>
            <guid isPermaLink="true">https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp</guid>
            <pubDate>Mon, 06 Jul 2026 08:00:23 +0530</pubDate>
            <description><![CDATA[ಚಿತ್ರದುರ್ಗದ ಐಮಂಗಲದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಹರಳಯ್ಯ ಮಠದ ಸ್ವಾಮೀಜಿ ಮೇಲೆ ದುಷ್ಕರ್ಮಿಗಳು ಭೀಕರ ಹಲ್ಲೆ ನಡೆಸಿದ್ದಾರೆ. ಬಳಿಕ, ದೂರು ನೀಡಲು ಹೋದ ಸ್ವಾಮೀಜಿಯನ್ನು ಪೊಲೀಸ್ ಠಾಣೆಯೊಳಗೆ ಬೆನ್ನಟ್ಟಿ ಅಲ್ಲೂ ದೌರ್ಜನ್ಯ ಎಸಗಿದ್ದು, ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtm4haw1dwp9vb61fctpgjd,imgname-chitradurga-haralayya-swamiji-1783304963419.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಶಿವಶರಣ ಹರಳಯ್ಯ ಮಠಕ್ಕೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳ ತಂಡವೊಂದು, ಮಠದ ಪೀಠಾಧಿಪತಿಗಳಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಹಾಗೂ ಶಾಲಾ ಬಸ್ ಚಾಲಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಠಾಣೆಗೆ ಹೋದ ಸ್ವಾಮೀಜಿಯನ್ನು ಬೆನ್ನಟ್ಟಿ ಪೊಲೀಸ್ ಠಾಣೆಯ ಒಳಗೇ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;p&gt;ಮಠದ ಪ್ರವೇಶ ದ್ವಾರದ ಜಾಗಕ್ಕೆ ಸಂಬಂಧಿಸಿದಂತೆ ಹರಳಯ್ಯ ಶ್ರೀಗಳು ಹಾಗೂ ಸ್ಥಳೀಯ ನಿವಾಸಿ ಸಿದ್ದೇಶ್ವರ್ ಕುಟುಂಬದ ನಡುವೆ ಕಳೆದ ಕೆಲವು ಸಮಯದಿಂದ ತೀವ್ರ ವ್ಯಾಜ್ಯವಿದೆ. ಸದ್ಯ ಈ ಜಾಗದ ವಿಚಾರವು ನ್ಯಾಯಾಲಯದ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿದಿದೆ. ಪ್ರಕರಣ ನ್ಯಾಯಾಲಯದ ಹಂತದಲ್ಲಿದ್ದರೂ ಸಹ, ಸಿದ್ದೇಶ್ವರ್ ಮತ್ತು ಆತನ ಕಡೆಯವರು ಪದೇಪದೇ ದಬ್ಬಾಳಿಕೆ ನಡೆಸುತ್ತಿದ್ದರು. ಕೆಲವು ತಿಂಗಳುಗಳ ಹಿಂದೆಯೂ ಮಠದ ಪ್ರವೇಶ ದ್ವಾರಕ್ಕೆ ಬೇಲಿ ಹಾಕಿ ದರ್ಪ ತೋರಲಾಗಿತ್ತು ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;ರಾತ್ರಿ ನಡೆದಿದ್ದೇನು?&lt;/h2&gt;&lt;p&gt;ನಿನ್ನೆ ರಾತ್ರಿ ಸಿದ್ದೇಶ್ವರ ಮತ್ತು ಇತರರು ಮಠದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಮಠದ ಜಾಗದ ವಿಚಾರವಾಗಿ ಗಲಾಟೆ ಆರಂಭಿಸಿ, ಜಾತಿನಿಂದನೆ ಮಾಡುತ್ತಾ ಹರಳಯ್ಯ ಶ್ರೀಗಳ ಮೇಲೆ ಒದ್ದು, ತಿವಿದು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶ್ರೀಗಳ ಮೂಗು ಮತ್ತು ಬಾಯಿಯಲ್ಲಿ ರಕ್ತ ಬಂದಿದೆ. ಶ್ರೀಗಳ ರಕ್ಷಣೆಗೆ ಬಂದ ಮಠದ ಶಾಲಾ ಬಸ್ ಚಾಲಕ ಭೀಮರಾಜ್ ಎಂಬುವವರ ಮೇಲೂ ದುಷ್ಕರ್ಮಿಗಳು ನಿರ್ದಕ್ಷಿಣ್ಯವಾಗಿ ಹಲ್ಲೆ ನಡೆಸಿದ್ದಾರೆ. &quot;ನಿನ್ನನ್ನು ಕೊಂದೇ ನಾನು ಸಾಯುತ್ತೇನೆ&quot; ಎಂದು ಸಿದ್ದೇಶ್ವರ್ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.&lt;/p&gt;&lt;h2&gt;ಪೊಲೀಸ್ ಠಾಣೆಯಲ್ಲೇ ರೌಡಿಸಂ!&lt;/h2&gt;&lt;p&gt;ದುಷ್ಕರ್ಮಿಗಳ ದಾಳಿಯಿಂದ ತಪ್ಪಿಸಿಕೊಂಡು ಹರಳಯ್ಯ ಶ್ರೀಗಳು ತಕ್ಷಣವೇ ರಕ್ಷಣೆ ಕೋರಿ ಹಾಗೂ ದೂರು ನೀಡಲು ಐಮಂಗಲ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆದರೆ, ಆರೋಪಿಗಳು ಕಾನೂನಿಗೂ ಹೆದರದೆ ಶ್ರೀಗಳನ್ನು ಬೆನ್ನಟ್ಟಿಕೊಂಡು ಪೊಲೀಸ್ ಠಾಣೆಯ ಒಳಗೇ ನುಗ್ಗಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಶ್ರೀಗಳ ಎದೆಗೆ ಒದ್ದು ದೌರ್ಜನ್ಯ ಎಸಗಿದ್ದಲ್ಲದೆ, ಠಾಣೆಯಲ್ಲಿದ್ದ ಕುರ್ಚಿಗಳನ್ನು ಮುರಿದು ಹಾಕಿದ್ದಾರೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ಹರಳಯ್ಯ ಶ್ರೀಗಳು ಹಾಗೂ ಬಸ್ ಚಾಲಕ ಭೀಮರಾಜ್ ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಐಮಂಗಲ ಠಾಣೆಯ ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;ಜಿಲ್ಲಾಸ್ಪತ್ರೆಯಲ್ಲಿ ಹರಳಯ್ಯ ಶ್ರೀಗಳ ಆಕ್ರೋಶದ ನುಡಿಗಳು:&lt;/h2&gt;&lt;p&gt;ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರಳಯ್ಯ ಶ್ರೀಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸ್ಥಳೀಯ ಪೊಲೀಸ್ ವ್ಯವಸ್ಥೆಯ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. &quot;ಮಠದ ಜಾಗದ ವಿವಾದ ನ್ಯಾಯಾಲಯದಲ್ಲಿದೆ. ಹೀಗಿದ್ದರೂ ಸಿದ್ದೇಶ್ವರ್ ಯಾರದ್ದೋ ಕುಮ್ಮಕ್ಕಿನಿಂದ ಪದೇಪದೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾನೆ. ಕೆಲವು ತಿಂಗಳ ಹಿಂದೆ ಮಠದ ದ್ವಾರಕ್ಕೆ ಬೇಲಿ ಹಾಕಿದಾಗ ದೂರು ನೀಡಲು ಹೋದರೂ ಪೊಲೀಸರು ದೂರನ್ನು ಸ್ವೀಕರಿಸದೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪೊಲೀಸರ ನಿರ್ಲಕ್ಷ್ಯವೇ ಇಷ್ಟೆಲ್ಲಾ ನಡೆಯಲು ಕಾರಣ. ಐಮಂಗಲ ಠಾಣೆಯ ಒಳಗೇ ನುಗ್ಗಿ ನನ್ನ ಮೇಲೆ ಒದ್ದು, ಕುರ್ಚಿ ಮುರಿದು ದರ್ಪ ತೋರಿದ್ದಾರೆ ಎಂದರೆ ಇಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ? ತಕ್ಷಣವೇ ಐಮಂಗಲ ಠಾಣೆಯ ಮಹಿಳಾ ಪಿಎಸ್&zwnj;ಐ (PSI) ಅವರನ್ನು ಅಮಾನತುಗೊಳಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು,&quot; ಎಂದು ಶ್ರೀಗಳು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-haralayya-swamiji-and-a-driver-attacked-goons-vandalize-police-station-gdp/articleshow-bsvhlfp"/>
        </item>
        <item>
            <title><![CDATA[Chitradurga: ಮೃತ ASI ಮಂಜುನಾಥ್ ಕುಟುಂಬಕ್ಕೆ 82 ಲಕ್ಷ ರು ಪರಿಹಾರ; ಚೆಕ್ ಹಸ್ತಾಂತರ]]></title>
            <link>https://kannada.asianetnews.com/karnataka-districts/chitradurga-rs-82-lakh-compensation-to-the-family-of-deceased-asi-manjunath-mrq/articleshow-co6ra34</link>
            <guid isPermaLink="true">https://kannada.asianetnews.com/karnataka-districts/chitradurga-rs-82-lakh-compensation-to-the-family-of-deceased-asi-manjunath-mrq/articleshow-co6ra34</guid>
            <pubDate>Thu, 23 Jul 2026 07:21:47 +0530</pubDate>
            <description><![CDATA[&lt;p&gt;ಅಕಾಲಿಕವಾಗಿ ನಿಧನರಾದ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್ಐ) ಮಂಜುನಾಥ್ ಅವರ ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ 82 ಲಕ್ಷ ರೂಪಾಯಿ ವಿಮಾ ಪರಿಹಾರ ನೀಡಿದೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅವರ ವೇತನ ಖಾತೆಯ ಪ್ಯಾಕೇಜ್ ಅಡಿಯಲ್ಲಿ ಈ ಚೆಕ್ ಅನ್ನು ಅವರ ಪತ್ನಿ ವೃಂದಮ್ಮ ಅವರಿಗೆ ಹಸ್ತಾಂತರಿಸಲಾಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky6ajhytyecqg2qwf0hkrjqx,imgname-chitradurga--1784771332058.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಅಕಾಲಿಕ ನಿಧನ ಹೊಂದಿದ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್&zwnj;ಐ) ಮಂಜುನಾಥ್ ಅವರ ಪತ್ನಿ ಹಾಗೂ ನಾಮಿನಿ ವೃಂದಮ್ಮ ಅವರಿಗೆ 82 ಲಕ್ಷಗಳ ವಿಮಾ ಪರಿಹಾರದ ಚೆಕ್ ಅನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ಹಸ್ತಾಂತರಿಸಲಾಯಿತು.&lt;/p&gt;&lt;p&gt;ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ವ್ಯವಸ್ಥಾಪಕ ಸುರೇಶ್ ಶೆಟ್ಟಿ ಅವರು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಎಸ್&zwnj;ಪಿ ರಂಜಿತ್ ಕುಮಾರ್ ಬಂಡಾರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿತರಿಸಿದರು.&lt;/p&gt;&lt;h2&gt;&lt;strong&gt;ವೇತನ ಪ್ಯಾಕೇಜ್&zwnj;ನಡಿ ದೊರೆಯುವ ವಿಮಾ ಸೌಲಭ್ಯ&lt;/strong&gt;&lt;/h2&gt;&lt;p&gt;ಮಂಜುನಾಥ್ ಅವರು ಬ್ಯಾಂಕ್ ಆಫ್ ಬರೋಡಾದ ಚಳ್ಳಕೆರೆ ಶಾಖೆಯಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿದ್ದರು. ಅವರ ಅಕಾಲಿಕ ನಿಧನದ ನಂತರ, ಈ ವೇತನ ಪ್ಯಾಕೇಜ್&zwnj;ನಡಿ ದೊರೆಯುವ ವಿಮಾ ಸೌಲಭ್ಯದ ಮೂಲಕ ಅವರ ನಾಮಿನಿಗೆ 82 ಲಕ್ಷಗಳ ವಿಮಾ ಪರಿಹಾರ ದೊರೆತಿದ್ದು, ಇದು ಅವರ ಕುಟುಂಬಕ್ಕೆ ಸಂಕಷ್ಟದ ಸಮಯದಲ್ಲಿ ಮಹತ್ತರ ಆರ್ಥಿಕ ನೆರವಾಗಿದೆ.&lt;/p&gt;&lt;p&gt;ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ವ್ಯವಸ್ಥಾಪಕ ಸುರೇಶ್ ಶೆಟ್ಟಿ, ಸರ್ಕಾರಿ ನೌಕರರ ಕಲ್ಯಾಣಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವಿಶೇಷ ವೇತನ ಪ್ಯಾಕೇಜ್ ಯೋಜನೆಗಳನ್ನು ರೂಪಿಸಿದ್ದು, ವೈಯಕ್ತಿಕ ಅಪಘಾತ ವಿಮೆ, ಜೀವ ವಿಮೆ, ಓವರ್&zwnj;ಡ್ರಾಫ್ಟ್ ಸೌಲಭ್ಯ, ಕಡಿಮೆ ಬಡ್ಡಿದರದ ಸಾಲಗಳು ಸೇರಿದಂತೆ ಹಲವು ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದೆ . ಇಂತಹ ಯೋಜನೆಗಳು ಅನಿರೀಕ್ಷಿತ ಸಂದರ್ಭಗಳಲ್ಲಿ ನೌಕರರು ಹಾಗೂ ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಕಲ್ಪಿಸುತ್ತವೆ.&lt;/p&gt;&lt;p&gt;ಎಲ್ಲ ಸರ್ಕಾರಿ ಇಲಾಖೆಗಳು ತಮ್ಮ ಸಿಬ್ಬಂದಿಯ ವೇತನವನ್ನು ಬ್ಯಾಂಕ್ ಆಫ್ ಬರೋಡಾದ ವೇತನ ಖಾತೆಗಳ ಮೂಲಕ ಜಮಾ ಮಾಡುವಂತೆ ಅವರು ಮನವಿ ಮಾಡಿದರು. ಇದರಿಂದ ನೌಕರರು ಹಾಗೂ ಅವರ ಕುಟುಂಬಗಳು ವಿಮಾ ರಕ್ಷಣೆ ಸೇರಿದಂತೆ ವಿವಿಧ ವಿಶೇಷ ಸೌಲಭ್ಯಗಳ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಚಳ್ಳಕೆರೆ ಶಾಖಾ ವ್ಯವಸ್ಥಾಪಕ ರವಿಚಂದ್ರನ್, ಚಿತ್ರದುರ್ಗ ಬಿಡಿ ರಸ್ತೆ ಶಾಖೆಯ ವ್ಯವಸ್ಥಾಪಕ ಮಣಿ ಮಾರನ್ ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಆದಾಯ ಹೆಚ್ಚಳಕ್ಕೆ BMTC ಹೊಸ ಪ್ಲಾನ್; ಬಸ್&zwnj;ನಲ್ಲಿ ಪ್ರಯಾಣಿಕರಿಗೆ ಸಿಗಲಿದೆ ನ್ಯೂ QR ಕೋಡ್&lt;/strong&gt;&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chitradurga-rs-82-lakh-compensation-to-the-family-of-deceased-asi-manjunath-mrq/articleshow-co6ra34"/>
        </item>
        <item>
            <title><![CDATA['ನನ್ನನ್ನ ಭಾವಿ ಸಿಎಂ ಅಂತಾ ಕರೆಯೋದೇ ನನಗೆ ಸಮಸ್ಯೆ..: ವಿಜಯೇಂದ್ರ ಹೇಳಿಕೆ ವೈರಲ್]]></title>
            <link>https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy</link>
            <guid isPermaLink="true">https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy</guid>
            <pubDate>Thu, 09 Jul 2026 06:03:47 +0530</pubDate>
            <description><![CDATA[&lt;p&gt;ಲವರು ನನ್ನನ್ನು ಭಾವಿ ಮುಖ್ಯಮಂತ್ರಿ ಅಂತ ಕರೆಯುತ್ತಿರುವುದೇ ನನಗೆ ಸಮಸ್ಯೆಯಾಗಿದೆ. ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯವಲ್ಲ, ಮುಖಂಡರು ಜನರಿಗೆ ಹತ್ತಿರವಾದಾಗ ಮಾತ್ರ ಜನರು ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k4wp2b5v03z6v8krfh3yrqaf,imgname-gnghmn-1757604293819.png" type="image/jpeg" height="390" width="690"/>
            <content:encoded><![CDATA[&lt;ul&gt; &lt;li&gt;ಮುಂದೆ ಯಾರು ಸಿಎಂ ಆಗ್ತಾರೆ ಮುಖ್ಯವಲ್ಲ&lt;/li&gt; &lt;li&gt;&amp;nbsp;ಮುಖಂಡರು ಜನರಿಗೆ ಹತ್ತಿರವಾಗುವು ಮುಖ್ಯ&lt;/li&gt;&lt;/ul&gt;&lt;p&gt;&lt;strong&gt;ಚಿತ್ರದುರ್ಗ (ಜು.9): &lt;/strong&gt;ಕೆಲವರು ನನ್ನನ್ನು ಭಾವಿ ಮುಖ್ಯಮಂತ್ರಿ ಅಂತ ಕರೆಯುತ್ತಿರುವುದೇ ನನಗೆ ಸಮಸ್ಯೆಯಾಗಿದೆ. ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯವಲ್ಲ, ಮುಖಂಡರು ಜನರಿಗೆ ಹತ್ತಿರವಾದಾಗ ಮಾತ್ರ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.&lt;/p&gt;&lt;h2&gt;ಮುಂದೆ ಯಾರು ಸಿಎಂ ಅನ್ನೋದು ಮುಖ್ಯ ಅಲ್ಲ: ವಿಜಯೇಂದ್ರ&lt;/h2&gt;&lt;p&gt;ನಗರದಲ್ಲಿ ಬುಧವಾರ ನಡೆದ ವಿಧಾನ ಪರಿಷತ್&zwnj; ಚುನಾವಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ತಮ್ಮ ಭಾಷಣದಲ್ಲಿ ಭಾವಿ ಸಿಎಂ ವಿಜಯೇಂದ್ರ ಎಂದು ಉಲ್ಲೇಖಿಸಿದರು. ಈ ಸಂಗತಿಯನ್ನು ಆ ಬಳಿಕ ಮಾತನಾಡಿದ ವಿಜಯೇಂದ್ರ ಅವರು ಪ್ರಸ್ತಾಪಿಸಿ, &lsquo;ಯಾರು ಮುಂದೆ ಸಿಎಂ ಆಗ್ತಾರೆಂಬುದು ಮುಖ್ಯ ಅಲ್ಲ. ಮತದಾರರಿಗೆ ನಮ್ಮ ಮೇಲೆ ವಿಶ್ವಾಸ ಮೂಡುವಂತಹ ಕೆಲಸದ ಕಡೆ ಗಮನ ಹರಿಸಬೇಕು. ಕಾರ್ಯಕರ್ತರು ಹಾಗೂ ಮುಖಂಡರು ಜನರಿಗೆ ಹತ್ತಿರ ಆಗಬೇಕು. ಆಗ ಮಾತ್ರ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸುತ್ತಾರೆ. ಪಕ್ಷ ಅಧಿಕಾರಕ್ಕೆ ಬಂದ ಮೇಲಷ್ಟೆ ಉಳಿದವು ಚರ್ಚೆಯಾಗುತ್ತವೆ&rsquo; ಎಂದು ಹೇಳಿದರು.&lt;/p&gt;&lt;h3&gt;ವಿಧಾನ ಪರಿಷತ್ ಈಗ ಹಣವಂತರ ಚಾವಡಿಯಾಗಿದೆ&lt;/h3&gt;&lt;p&gt;ಈ ಹಿಂದೆ ವಿಧಾನ ಪರಿಷತ್&zwnj;ಗೆ ಚುನಾವಣೆ ನಡೆದಾಗ ವಾಗ್ಮಿಗಳು, ಚಿಂತಕರು, ಸಮಾಜ ಸೇವಕರು ಪ್ರವೇಶ ಮಾಡುತ್ತಿದ್ದರು. ಈಗ ಅದು ಹಣವಂತರ ಚಾವಡಿಯಾಗಿದೆ. ವಿಧಾನ ಸಭೆಯಲ್ಲಿ ಶಾಸಕರು ಮಾಡಿದ ಕಾನೂನು, ನಿರ್ಣಯಗಳನ್ನು ವಿಧಾನ ಪರಿಷತ್&zwj;ಗೆ ಕಳುಹಿಸಲಾಗುತ್ತದೆ. ಅದನ್ನು ಅವರು ಸರಿಯಾಗಿ ಇದೆಯೇ ಅಥವಾ ಇಲ್ಲವೋ ಎಂದು ಪರಿಶೀಲಿಸುತ್ತಿದ್ದರು. ಇದು ರಾಜ್ಯಕ್ಕೆ ಅಗತ್ಯವೇ ಎಂದು ಚರ್ಚೆಯನ್ನು ಮಾಡುವುದರ ಮೂಲಕ ಪಾಸಾಗುತ್ತಿತ್ತು. ಆದರೆ, ಈಗ ಚರ್ಚೆಯ ಸ್ವರೂಪ ಬದಲಾಗಿದೆ. ವಿಧಾನ ಪರಿಷತ್ ಎಂದರೆ ಹಣವಂತರ ಚಾವಡಿಯಾಗಿದೆ. ಹಣ ಇದ್ದವರು ಇಲ್ಲಿಗೆ ಬಂದು ತಮ್ಮ ವ್ಯವಹಾರವನ್ನು ಉಳಿಸಿಕೊಳ್ಳಲು ಅಧಿಕಾರ ಬಳಸಿಕೊಳ್ಳುತ್ತಿದ್ದಾರೆ ಎಂದರು.&lt;/p&gt;&lt;p&gt;&lt;strong&gt;ಆಗ್ನೇಯ ಕ್ಷೇತ್ರದಲ್ಲಿ 8 ಬಾರಿ ಗೆಲುವು:&lt;/strong&gt;&lt;/p&gt;&lt;p&gt;ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜನಸಂಘ ಹಾಗೂ ಬಿಜೆಪಿ 8 ಬಾರಿ ಗೆಲುವನ್ನು ಸಾಧಿಸಿದೆ. ವಿಧಾನ ಪರಿಷತ್&zwj;ನಲ್ಲಿ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಬುದ್ಧಿವಂತರು ಇರಬೇಕಾಗಿದೆ. ಬಿಜೆಪಿ ತನ್ನ ಕಾರ್ಯಕರ್ತ ಕೆ.ಎಂ.ಸುರೇಶ್&zwj; ಅವರನ್ನು ಅಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ಚುನಾವಣೆ 5 ಜಿಲ್ಲೆಯ 33 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೂ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಜಯವನ್ನು ಸಾಧಿಸಿದೆ ಎಂದರು.&lt;/p&gt;&lt;p&gt;ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಚುನಾವಣೆಗೆ ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೊರಲಾಗಿದ್ದು, ಅವರಿಂದ ಪೂರಕ ಪ್ರತಿಕ್ರಿಯೆ ಬಂದಿದೆ. ನಮ್ಮ ಪಕ್ಷದ ಕಾರ್ಯಕರ್ತರು ಮುಂದಿನ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಇದಕ್ಕೂ ಮುನ್ನ ಪಕ್ಷದ ನಾಯಕರ ಮೇಲೆ ವಿಶ್ವಾಸ, ನಂಬಿಕೆ ಇಡಬೇಕಿದೆ ಎಂದು ಹೇಳಿದರು.&lt;/p&gt;&lt;p&gt;ಶಾಸಕರಾದ ಡಾ.ಎಂ.ಚಂದ್ರಪ್ಪ, ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಶಿವಯೋಗಿಸ್ವಾಮಿ ಇದ್ದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/future-cm-is-a-problem-bjp-state-president-by-vijayendra-s-statement-goes-viral-rav/articleshow-cuxrzuy"/>
        </item>
        <item>
            <title><![CDATA[ಚಿಂತಾಜನಕ ಸ್ಥಿತಿಯಲ್ಲಿರೋ ಸರ್ಕಾರಿ ಶಾಲೆಗಳ ಕಪ್ಪು ಬೋರ್ಡ್‌ಗಳಿಗೆ  ಬಣ್ಣ ಬಳಿಯುವ ಅಭಿಯಾನ]]></title>
            <link>https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw</link>
            <guid isPermaLink="true">https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw</guid>
            <pubDate>Mon, 29 Jun 2026 14:26:26 +0530</pubDate>
            <description><![CDATA[&lt;p&gt;ಸರ್ಕಾರಿ ಶಾಲೆಗಳಲ್ಲಿ ಹಾಳಾಗಿದ್ದ ಕಪ್ಪು ಬೋರ್ಡ್&zwnj;ಗಳಿಗೆ ಶಿಕ್ಷಣ ಇಲಾಖೆಯು 'ನಾವು ಬಣ್ಣ ಬಳಿಯುವ ಅಭಿಯಾನ'ದ ಮೂಲಕ ಹೊಸ ಜೀವ ನೀಡುತ್ತಿದೆ. ಶಾಲಾ ಅನುದಾನ ಬಳಸಿ ಶಿಕ್ಷಕರು ಈ ನವೀಕರಣ ಕಾರ್ಯ ಕೈಗೊಂಡಿದ್ದು, ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಕಾಯಕಲ್ಪ ನೀಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw99cn5vc6v2rpjrn3r4dsrd,imgname-blackboard-1782723269819.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಜಡೇಕುಂಟೆ ಮಂಜುನಾಥ್&zwnj;&lt;/strong&gt;&lt;/p&gt;&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಚಳ್ಳಕೆರೆ&lt;/strong&gt;&lt;/p&gt;&lt;p&gt;ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳ ತರಗತಿ ಕೋಣೆಗಳಲ್ಲಿರುವ ಕಪ್ಪು ಬೋರ್ಡ್ ಗಳ ಸ್ಥಿತಿ ಚಿಂತಾಜನಕವಾಗಿವೆ. ಸುಮಾರು ವರ್ಷಗಳಿಂದಲೂ ಹಾಳಾಗಿರುವ ಬೋರ್ಡುಗಳ ಮೇಲೆ ಶಿಕ್ಷಕರು ಬರೆದ ಯಾವುದೇ ಬರಹ ಕಾಣಿಸದಂತಿವೆ. ಇವುಗಳಿಗೆ ಜೀವ ಹೋಗಿದ್ದು, ಮತ್ತೆ ಜೀವಕಳೆ ತುಂಬಿಸಲು ಇದೀಗ ಕಪ್ಪು ಬೋರ್ಡಿಗೆ ಬಣ್ಣ ಬಳಿಯುವ ಅಭಿಯಾನ ಶುರು ಮಾಡಿರುವ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿಯೊಂದು ಶಾಲೆಗೆ ಭೇಟಿ ನೀಡಿದಾಗಲೂ ಇಂತಹ ಅಗತ್ಯ ಸೌಲಭ್ಯದಿಂದ ಮಕ್ಕಳು ವಂಚಿತರಾಗಬಾರದು ಇಂತಹ ಬೋರ್ಡುಗಳೇ ವಿದ್ಯಾರ್ಥಿಗಳ ಕಲಿಕಾ ವಿಧಾನಕ್ಕೆ ಜೀವಾಳ ಎಂದುಕೊಂಡು ಕಾಯಕಲ್ಪ ನೀಡಲು ಮುಂದಾಗಿದ್ದಾರೆ.&lt;/p&gt;&lt;p&gt;ತರಗತಿ ಕೋಣೆಗೆ ಶಿಕ್ಷಕರಾದವರು ಬಂದಾಕ್ಷಣವೇ ಕಪ್ಪು ಬೋರ್ಡಿನ ಮೇಲೆ ದಿನಾಂಕ, ಹಾಜರಾತಿ ಸಂಖ್ಯೆ, ಒಟ್ಟು ವಿದ್ಯಾರ್ಥಿಗಳ ಸಂಖ್ಯೆ, ಪಾಠ ಶುರುಮಾಡಿದಾಗ ಪಾಠದ ಹೆಸರು, ಗಣಿತ ಕಲಿಸುವಾಗ ಲೆಕ್ಕಗಳನ್ನು ಸೂತ್ರಗಳನ್ನು ಬೋರ್ಡಿನ ಮೇಲೆ ಬರೆದಾಗ ಮಾತ್ರ ವಿದ್ಯಾರ್ಥಿಗಳಿಗೆ ಅರ್ಥ ಆಗುತ್ತವೆ.&lt;/p&gt;&lt;p&gt;ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಕಪ್ಪು ಬೋರ್ಡುಗಳು ಬರೆದರೂ ಕಾಣಿಸದಷ್ಟು ಹಾಳಾಗಿ ಹೋಗಿದ್ದವು. ಇಂತಹ ಶಾಲೆಗಳಿಗೆ ಭೇಟಿ ನೀಡಿದಾಗ ಗಮನಿಸಿದ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಸಮೂಹ ಸಂಪನ್ಮೂಲ ಅಧಿಕಾರಿ ಎಚ್.ಬಿ. ಮಂಜುಬಾಬು ಯಾವ ಶಾಲೆಗಳಲ್ಲಿ ಬೋರ್ಡುಗಳು ಹಾಳಾಗಿವೆಯೋ ಅಂತಹ ಶಾಲೆಯ ಶಿಕ್ಷಕರಿಗೆ ಶಾಲಾ ಅನುದಾನವನ್ನು ಬಳಸಿಕೊಂಡು ಬೋರ್ಡುಗಳಿಗೆ ಕಾಯಕಲ್ಪ ನೀಡಿ ಎಂದು ಸೂಚಿಸಿದ್ದಾರೆ.&lt;/p&gt;&lt;p&gt;ಇಂತಹ ಸೂಚನೆಯನ್ನು ಪಾಲಿಸುತ್ತಿರುವ ತಾಲೂಕಿನ ಬಹುತೇಕ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರುಗಳು ಹಾಳಾಗಿರುವ ಬೋರ್ಡಿಗೆ ಹೊಸ ಕಾಯಕಲ್ಪ ನೀಡುತ್ತಿರುವುದು ಕಂಡು ಬರುತ್ತಿದೆ. ಕಸಬಾ ಹೋಬಳಿ ವ್ಯಾಪ್ತಿಯ ಹೆಗ್ಗೆರೆ, ಸಿದ್ದಾಪುರ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಕಪ್ಪು ಬೋರ್ಡಿಗೆ ಕಾಯಕಲ್ಪ ನೀಡುವ ಕಾಯಕ ಪ್ರಗತಿಯಲ್ಲಿದೆ.&lt;/p&gt;&lt;p&gt;ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೊಂದಲು ಮಕ್ಕಳು ಸಿಗುತ್ತಿಲ್ಲ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳ ಕಡೆಗೆ ತಲೆ ಹಾಕುತ್ತಿಲ್ಲ. ಈ ಕಾರಣಕ್ಕಾಗಿಯೇ ಜೂನ್ ತಿಂಗಳು ಬಂತೆಂದರೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಶಿಕ್ಷಕರೇ ಮನೆ ಮನೆಗೆ ತೆರಳಿ ಪೋಷಕರ ಮನವೊಲಿಸುವ ಕಡೆಗೆ ಹೆಜ್ಜೆ ಹಾಕುತ್ತಿರುವುದು ಈಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಆದರೂ ಕೆಲವು ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಜೀರೋ ದಾಖಲಾತಿ ಎಂಬಂತಾಗಿದೆ.&lt;/p&gt;&lt;h2&gt;&lt;strong&gt;ಕಪ್ಪು ಬೋರ್ಡಿನ ಕಾಯಕಲ್ಪ&lt;/strong&gt;&lt;/h2&gt;&lt;p&gt;ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಸೇರಿದಂತೆ ಮೂಲಸೌಲಭ್ಯಗಳ ಕೊರತೆ ಕಾಣಿಸಬಾರದು ಎಂಬ ಸದುದ್ದೇಶದಿಂದ ಸರ್ಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿರುವುದು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಮಕ್ಕಳ ಕಲಿಕಾ ಪ್ರಕ್ರಿಯೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಕಪ್ಪು ಬೋರ್ಡಿನ ಕಾಯಕಲ್ಪಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರುಗಳು ಮುಂದಾಗಿರುವುದು ಮಕ್ಕಳ ಕಲಿಕಾ ಕಾರ್ಯಕ್ಕೆ ಪ್ರೇರಣೆಯಾಗಿದೆ.&lt;/p&gt;&lt;h3&gt;&lt;strong&gt;ನಾವು ಬಣ್ಣ ಬಳಿಯುವ ಅಭಿಯಾನದಡಿ ಬೋರ್ಡುಗಳ ನವೀಕರಣ: ಬಿಇಒ&lt;/strong&gt;&lt;/h3&gt;&lt;p&gt;ಚಳ್ಳಕೆರೆ ತಾಲೂಕಿನಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳು 357, ಸರ್ಕಾರಿ ಪ್ರೌಢಶಾಲೆಗಳು 23 ಸೇರಿ ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ 380. ಇದರಲ್ಲಿ ನೂರರಿಂದ ನೂರಾ ಇಪ್ಪತ್ತು ಸರ್ಕಾರಿ ಶಾಲೆಗಳಲ್ಲಿ ಕಪ್ಪು ಬೋರ್ಡುಗಳು ಹಾಳಾಗಿವೆ.&lt;/p&gt;&lt;p&gt;ಇದೀಗ &lsquo;ನಾವು ಬಣ್ಣ ಬಳಿಯುವ ಅಭಿಯಾನ&rsquo; ಎಂಬ ಹೆಸರಿನಲ್ಲಿ ಹಾಳಾಗಿರುವ ಬೋರ್ಡುಗಳ ನವೀಕರಣ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಶಾಲೆಗಳಲ್ಲಿ ಇರುವ ಶಾಲಾ ಸಂಚಿತ ನಿಧಿಯಲ್ಲಿರುವ ಹಣವನ್ನು ಬಳಸಿಕೊಂಡು ನವೀಕರಣ ಮಾಡಲು ಸೂಚಿಸಿದ್ದೇವೆ. ನವೀಕರಣಕ್ಕೆ ಒಂದು ಸಾವಿರದವರೆಗೆ ಖರ್ಚಾಗಬಹುದು. ಕೆಲವು ಶಾಲೆಗಳಲ್ಲಿ ಶಿಕ್ಷಕರೇ ಈ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಪೂರ್ತಿ ಹಾಳಾಗಿರುವ ಬೋರ್ಡನ್ನು ಹೊಸದಾಗಿ ನಿರ್ಮಾಣ ಮಾಡಲು ಹೆಚ್ಚು ಹಣ ಬೇಕಾಗುತ್ತದೆ. ನವೀಕರಣ ಮಾಡುವಷ್ಟು ಹಾಳಾಗಿವೆ ಅಷ್ಟೇ. ಸಂಪೂರ್ಣ ಹಾಳಾಗಿರುವುದು ಎಲ್ಲಿಯೂ ಕಂಡು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್ ಅವರು ತಿಳಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chitradurga-education-department-is-giving-new-life-to-damaged-blackboards-in-government-schools-mrq/articleshow-gfgzuvw"/>
        </item>
        <item>
            <title><![CDATA[ಬರ ಪರಿಸ್ಥಿತಿ, ಜಾನುವಾರು ಸಾಕಲಾಗದೆ ಕನಿಷ್ಠ ಬೆಲೆಗೆ ಎತ್ತುಗಳ ಮಾರಾಟಕ್ಕೆ ಮುಂದಾದ ಚಿತ್ರದುರ್ಗದ ರೈತರು!]]></title>
            <link>https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa</link>
            <guid isPermaLink="true">https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa</guid>
            <pubDate>Fri, 17 Jul 2026 17:57:11 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ತೀವ್ರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಸಾಲ ಮಾಡಿ ಖರೀದಿಸಿದ್ದ ಎತ್ತುಗಳನ್ನು, ಇದೀಗ ಮೇವು ಮತ್ತು ನೀರಿನ ಅಭಾವದಿಂದಾಗಿ ಭಾರಿ ನಷ್ಟಕ್ಕೆ ಮಾರಲು ಮುಂದಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxr0k5k4n2888hgy55zx7r7j,imgname-chitradurga--farmers-1784291104356.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಜು.17): &lt;/strong&gt;ಮಧ್ಯ ಕರ್ನಾಟಕದಾದ್ಯಂತ ಭೀಕರ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ವಿಕೋಪಕ್ಕೆ ತಿರುಗುತ್ತಿದ್ದು, ಕೋಟೆ ನಾಡು ಚಿತ್ರದುರ್ಗದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗಬಹುದು ಎಂಬ ಆಸೆಯಿಂದ ಜಮೀನು ಊಳಲು ಸಾಲಸೋಲ ಮಾಡಿ ಎತ್ತುಗಳನ್ನು ಖರೀದಿಸಿದ್ದ ರೈತರು, ಈಗ ತೀವ್ರ ನೀರಿನ ಅಭಾವ ಮತ್ತು ಮೇವಿನ ಕೊರತೆಯ ಭೀತಿಯಿಂದಾಗಿ ಅವುಗಳನ್ನು ಭಾರಿ ನಷ್ಟಕ್ಕೆ ಮಾರಾಟ ಮಾಡಲು ಮಾರುಕಟ್ಟೆಗೆ ಮುಗಿಬೀಳುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲೂ ಕೊಳ್ಳುವವರಿಲ್ಲದೆ ಅನ್ನದಾತರು ಕಣ್ಣೀರು ಹಾಕುತ್ತಾ ಜಾನುವಾರುಗಳೊಂದಿಗೆ ಬರಿಗೈಲಿ ಮನೆಗೆ ಮರಳುವಂತಾಗಿದೆ.&lt;/p&gt;&lt;p&gt;ಈ ಭಾಗದಲ್ಲಿ ಕೃಷಿ ದಿನಗಳು ಆರಂಭವಾಗುತ್ತಿದ್ದಂತೆ ಎತ್ತುಗಳ ಖರೀದಿ ಮತ್ತು ಮಾರಾಟ ಪ್ರಕ್ರಿಯೆ ನಡೆಯುವುದು ಸಾಮಾನ್ಯ ರೂಢಿಯಾಗಿದೆ. ಈ ವರ್ಷವೂ ಸಕಾಲಕ್ಕೆ ಮಳೆಯಾಗಲಿದೆ ಎಂಬ ಭರವಸೆಯೊಂದಿಗೆ ನೂರಾರು ರೈತರು ಮೇ ತಿಂಗಳು ಹಾಗೂ ಜೂನ್ ಮೊದಲ ವಾರದಲ್ಲಿ ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯಿಂದ ಲಕ್ಷಾಂತರ ರೂಪಾಯಿ ನೀಡಿ ಎತ್ತುಗಳನ್ನು, ವಿಶೇಷವಾಗಿ ರಾಜ್ಯದ ಹೆಮ್ಮೆಯ &lsquo;ಅಮೃತ್&zwnj;ಮಹಲ್&rsquo; (Amruthmahal) ತಳಿಯ ಎತ್ತುಗಳನ್ನು ಖರೀದಿಸಿದ್ದರು. ಆದರೆ ಮುಂಗಾರು ಸಂಪೂರ್ಣ ಕೈಕೊಟ್ಟಿರುವುದರಿಂದ ಜಾನುವಾರುಗಳಿಗೆ ತುತ್ತು ಮೇವು, ಕುಡಿಯಲು ನೀರು ಒದಗಿಸಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ತಾವು ಕೊಂಡ ಬೆಲೆಗಿಂತಲೂ ಕಡಿಮೆ ಬೆಲೆಗೆ ಎತ್ತುಗಳನ್ನು ಮಾರಲು ರೈತರು ಮುಂದಾಗಿದ್ದಾರೆ.&lt;/p&gt;&lt;h2&gt;&lt;strong&gt;2015ರ ಭೀಕರ ಬರಗಾಲದ ನೆನಪು; ರೈತರಲ್ಲಿ ಆತಂಕ&lt;/strong&gt;&lt;/h2&gt;&lt;p&gt;ಬರಗಾಲದ ಪರಿಸ್ಥಿತಿ ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಭೀಕರ ರೂಪ ತಾಳುವ ಮುನ್ನವೇ ಹೇಗಾದರೂ ಮಾಡಿ ಜಾನುವಾರುಗಳನ್ನು ವಿಲೇವಾರಿ ಮಾಡಲು ರೈತರು ಹರಸಾಹಸ ಪಡುತ್ತಿದ್ದಾರೆ. ಈ ಹಿಂದೆ ಎದುರಿಸಿದ್ದ ಭೀಕರ ಬರದ ಕಹಿ ನೆನಪುಗಳನ್ನು ರೈತರು ಬಿಚ್ಚಿಟ್ಟಿದ್ದಾರೆ. ತೀವ್ರ ನೀರು ಮತ್ತು ಮೇವಿನ ಕೊರತೆಯಿಂದಾಗಿ 2015 ರಲ್ಲಿ ಉಂಟಾಗಿದ್ದ ಭೀಕರ ಬರಗಾಲದ ಪರಿಸ್ಥಿತಿ ಈ ಬಾರಿಯೂ ಮರುಕಳಿಸುವ ಭೀತಿ ಅವರನ್ನು ಕಾಡುತ್ತಿದೆ. ಆ ಸಮಯದಲ್ಲಿ ಮೇವು ಕೊಳ್ಳಲು ಹಣವಿಲ್ಲದೆ ಅನೇಕ ರೈತರು ತಮ್ಮ ಜೀವದಂತಿದ್ದ ಜಾನುವಾರುಗಳನ್ನು ರಸ್ತೆಗಳಲ್ಲೇ ಬಿಟ್ಟು ಹೋಗಿದ್ದ ಕರುಣಾಜನಕ ಪರಿಸ್ಥಿತಿಯನ್ನು ನೆನೆದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯು ಮಧ್ಯ ಕರ್ನಾಟಕದಲ್ಲೇ ಅತ್ಯಂತ ದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿಗೆ ಕೇವಲ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ನೆರೆಯ ಆಂಧ್ರಪ್ರದೇಶದಿಂದಲೂ ನೂರಾರು ರೈತರು ಮತ್ತು ವ್ಯಾಪಾರಿಗಳು ಜಾನುವಾರುಗಳ ವ್ಯಾಪಾರಕ್ಕಾಗಿ ಬರುತ್ತಾರೆ. ಆದರೆ ಈ ಬಾರಿ ಇಡೀ ಮಾರುಕಟ್ಟೆ ಕಳೆಗುಂದಿದ್ದು, ಎತ್ತುಗಳನ್ನು ಮಾರಲು ಬಂದವರೇ ತುಂಬಿದ್ದಾರೆ ವಿನಃ ಕೊಳ್ಳುವವರೇ ಇಲ್ಲದಂತಾಗಿದೆ.&lt;/p&gt;&lt;p&gt;ಪಶುಪಾಲನಾ ಇಲಾಖೆಯ ಪ್ರಾಥಮಿಕ ಅಂದಾಜಿನ ಪ್ರಕಾರ, ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವಿನ ದಾಸ್ತಾನು ಮುಂದಿನ ಸುಮಾರು 26 ವಾರಗಳವರೆಗೆ (ಅಂದರೆ ಆರು ತಿಂಗಳು) ಮಾತ್ರ ಜಾನುವಾರುಗಳ ಅಗತ್ಯವನ್ನು ಪೂರೈಸಬಲ್ಲದು. ಆ ನಂತರದ ದಿನಗಳಲ್ಲಿ ಮಳೆಯಾಗದಿದ್ದರೆ ಪರಿಸ್ಥಿತಿ ಕೈಮೀರಲಿದೆ.&lt;/p&gt;&lt;h2&gt;&lt;strong&gt;ಹಿಂಗಾರು ಮಳೆಯ ಮೇಲಷ್ಟೇ ಈಗ ಎಲ್ಲರ ನಿರೀಕ್ಷೆ&lt;/strong&gt;&lt;/h2&gt;&lt;p&gt;ಪ್ರಸ್ತುತ ಉದ್ಭವಿಸಿರುವ ಈ ಗಂಭೀರ ಪರಿಸ್ಥಿತಿಯ ಕುರಿತು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ. ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದ್ದು, &quot;ಸದ್ಯಕ್ಕೆ ಜಿಲ್ಲೆಯಲ್ಲಿ ಇನ್ನು 26 ವಾರಗಳಿಗೆ ಆಗುವಷ್ಟು ಮೇವಿನ ಲಭ್ಯತೆ ಇದೆ. ಮುಂಬರುವ ಹಿಂಗಾರು ಮಳೆ ಏನಾದರೂ ಸಕಾಲಕ್ಕೆ ಬಂದರೆ, ಕುಡಿಯುವ ನೀರು ಮತ್ತು ಮೇವಿನ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಲಿದೆ,&quot; ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ರೈತರು ಮತ್ತು ಮೂಕಪ್ರಾಣಿಗಳು ಮಾತ್ರ ಬರದ ಬೇಗೆಗೆ ಬೆಂದು ಹೋಗುತ್ತಿರುವುದು ಕಟು ವಾಸ್ತವವಾಗಿದೆ.&lt;/p&gt;&lt;p&gt;&lt;/p&gt;]]></content:encoded>
            <category>chitradurga</category>
            <dc:creator>Santosh Naik</dc:creator>
            <atom:link href="https://kannada.asianetnews.com/chitradurga/chitradurga-farmers-sell-bulls-drought-fodder-water-scarcity-san/articleshow-gi6z2xa"/>
        </item>
        <item>
            <title><![CDATA[ಉಳುಮೆ ಮಾಡವಾಗ ಪತ್ತೆಯಾಯ್ತು ಪಾಳೇಗಾರರ ಕಾಲದ ಅಪರೂಪದ ಶಾಸನ; ಆಕಳು ಕೊಂದ ಪಾಪದ ಉಲ್ಲೇಖ]]></title>
            <link>https://kannada.asianetnews.com/karnataka-districts/chitradurga-a-rare-inscription-from-the-palegara-period-was-discovered-while-ploughing-in-javagondanahalli-mrq/articleshow-isplb2g</link>
            <guid isPermaLink="true">https://kannada.asianetnews.com/karnataka-districts/chitradurga-a-rare-inscription-from-the-palegara-period-was-discovered-while-ploughing-in-javagondanahalli-mrq/articleshow-isplb2g</guid>
            <pubDate>Mon, 03 Aug 2026 08:13:36 +0530</pubDate>
            <description><![CDATA[ಚಿತ್ರದುರ್ಗ ಜಿಲ್ಲೆಯ ಜವಗೊಂಡನಹಳ್ಳಿಯಲ್ಲಿ ಉಳುಮೆ ಮಾಡುವಾಗ ಪಾಳೇಗಾರ ಅರಸ ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಕಾಲದ ಶಾಸನವೊಂದು ಪತ್ತೆಯಾಗಿದೆ. ಜನೋಪಕಾರಕ್ಕಾಗಿ ಕೆರೆ ಕಟ್ಟಿಸಿದ ದೊಡ್ಡಗೌಡನಿಗೆ ಅರಸರು ಉಂಬಳಿ ಭೂಮಿ ನೀಡಿದ್ದನ್ನು ಈ ಶಾಸನವು ದಾಖಲಿಸುತ್ತದೆ. ಪ್ರಸ್ತುತ ಈ ಶಾಸನವನ್ನು ಚಿತ್ರದುರ್ಗದ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kz2qpw13f1d8rv08g46c6evb,imgname-shasana-1785724629027.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ:&lt;/strong&gt; ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ ಕೆರೆಯ ಪಕ್ಕದ ಹೊಲವೊಂದರಲ್ಲಿ ಉಳುಮೆ ಮಾಡುವಾಗ ಚಿತ್ರದುರ್ಗದ ಪಾಳೇಗಾರ ಅರಸರ ಕಾಲಘಟ್ಟಕ್ಕೆ ಸೇರಿದ ಶಾಸನವೊಂದು ಪತ್ತೆಯಾಗಿದೆ.&lt;/p&gt;&lt;p&gt;ಪ್ರಸ್ತುತ ಈ ಶಾಸನವನ್ನು ಚಿತ್ರದುರ್ಗದ ರಂಗಯ್ಯನ ಬಾಗಿಲಿನಲ್ಲಿರುವ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರಿಸಲಾಗಿದೆ. ಕರಿಕಲ್ಲಿನಲ್ಲಿ ಕೆತ್ತಲಾದ ಈ ಶಾಸನವು ಒಟ್ಟು 17 ಸಾಲುಗಳನ್ನು ಒಳಗೊಂಡಿದ್ದು, ಕನ್ನಡ ಲಿಪಿ ಹಾಗೂ ಭಾಷೆಯಲ್ಲಿದೆ. ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ (ಕ್ರಿ.ಶ. 1575-1586) ಆಳ್ವಿಕೆಯ ಅವಧಿಯಲ್ಲಿ ಇದು ರಚನೆಯಾಗಿದೆ ಎಂದು ಗುರುತಿಸಲಾಗಿದೆ.&lt;/p&gt;&lt;h2&gt;&lt;strong&gt;ಉಂಬಳಿ ಭೂಮಿ ಕೊಡುಗೆ&lt;/strong&gt;&lt;/h2&gt;&lt;p&gt;ಕಾಮಗೇತಿ ಇಮ್ಮಡಿ ಚಿಕ್ಕಣ್ಣ ಅರಸನ ಅಧೀನ ಅಧಿಕಾರಿಯಾಗಿದ್ದ ಲಕ್ಕಜೀಯನ ಮಗ ದೊಡ್ಡಗೌಡ ಎಂಬುವವರು ಜವಗೊಂಡನಹಳ್ಳಿಯಲ್ಲಿ ಜನೋಪಕಾರಕ್ಕಾಗಿ ಕೆರೆಯೊಂದನ್ನು ಕಟ್ಟಿಸಿದ್ದರು. ಈ ಕಾರ್ಯಕ್ಕೆ ಮೆಚ್ಚಿದ ಅರಸರು ದೊಡ್ಡಗೌಡನಿಗೆ &lsquo;ಉಂಬಳಿ ಭೂಮಿ&rsquo;ಯನ್ನು ಕೊಡುಗೆಯಾಗಿ ನೀಡಿರುವುದೇ ಈ ಶಾಸನದ ಮುಖ್ಯ ವಿಷಯವಾಗಿದೆ.&lt;/p&gt;&lt;p&gt;ಲಿಪಿಕಾರ ಅಥವಾ ಖಂಡರಣೆಕಾರನ ಪ್ರಮಾದದಿಂದಾಗಿ ಶಾಸನದಲ್ಲಿ ಅಲ್ಲಲ್ಲಿ ವ್ಯಾಕರಣ ದೋಷಗಳು ನುಸುಳಿವೆ. &lsquo;ಕಾರ್ತಿಕ ಶುದ್ಧ 10 ಗುರುವಾರ ದಂದು ಇದು ರಚನೆಯಾಗಿದ್ದು, ಶಕವರ್ಷ ಹಾಗೂ ಸಂವತ್ಸರವನ್ನು ಗುರುತಿಸುವ ಅಕ್ಷರಗಳು ಅಸ್ಪಷ್ಟವಾಗಿವೆ.&lt;/p&gt;&lt;h3&gt;&lt;strong&gt;ಕಾಶಿಯಲ್ಲಿ ಆಕಳನ್ನು ಕೊಂದ ಪಾಪ&lt;/strong&gt;&lt;/h3&gt;&lt;p&gt;ಶಾಸನದ ಕೊನೆಯಲ್ಲಿ ಶಾಪಾಶಯವಿದ್ದು, ಈ ದಾನ ಭೂಮಿಯನ್ನು ದೊಡ್ಡಗೌಡರ ಕುಟುಂಬದವರು ಸೂರ್ಯ-ಚಂದ್ರರಿರುವವರೆಗೂ ಸುಖವಾಗಿ ಅನುಭವಿಸತಕ್ಕದ್ದು. ಯಾರಾದರೂ ಈ ಭೂಮಿಯನ್ನು ಅಪಹರಿಸಿದರೆ ಕಾಶಿಯಲ್ಲಿ ಆಕಳನ್ನು ಕೊಂದ ಪಾಪಕ್ಕೆ ಈಡಾಗುವರು ಎಂದು ಎಚ್ಚರಿಸಲಾಗಿದೆ. ಶಾಸನವು ಅಲ್ಲಲ್ಲಿ ತ್ರುಟಿತವಾಗಿದ್ದು, ಇನ್ನಷ್ಟು ಹೆಚ್ಚಿನ ಅಧ್ಯಯನದ ಅಗತ್ಯವಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಉತ್ಖನನ ವೇಳೆ 30ಕ್ಕೂ ಅಧಿಕ ರಾವಣನ ವಿಗ್ರಹಗಳು ಪತ್ತೆ! ಇತಿಹಾಸ ತಜ್ಞರಲ್ಲಿ ಆಶ್ಚರ್ಯ&lt;/strong&gt;&lt;/p&gt;&lt;p&gt;ಶಾಸನ ದೊರೆತ ಸ್ಥಳಕ್ಕೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಪ್ರಹ್ಲಾದ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಶಾಸನವನ್ನು ಓದಿ ವಿಶ್ಲೇಷಿಸಲು ಡಾ. ರವಿಕುಮಾರ ಕೆ. ನವಲಗುಂದ ಸಹಕರಿಸಿದ್ದಾರೆ.&lt;/p&gt;&lt;p&gt;ಈ ಸಂದರ್ಭದಲ್ಲಿ ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಮಹಾಂತೇಶ್, ಗ್ರಾಮದ ಮುಖಂಡರಾದ ಜಿ. ಹನುಮಂತೇಗೌಡ, ಕೆ.ಎಚ್. ಚಿತ್ರಲಿಂಗಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;356 ಎಕರೆಯ ಪಿಲಿಕುಳ ಅಭಿವೃದ್ಧಿಗೆ ಮಾಸ್ಟರ್&zwnj; ಪ್ಲ್ಯಾನ್&zwnj;, ತಾರಾಲಯಕ್ಕೆ 10 ಕೋಟಿ ರೂ. ವೆಚ್ಚದ ಲೇಸರ್ ತಂತ್ರಜ್ಞಾನ!&lt;/strong&gt;&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chitradurga-a-rare-inscription-from-the-palegara-period-was-discovered-while-ploughing-in-javagondanahalli-mrq/articleshow-isplb2g"/>
        </item>
        <item>
            <title><![CDATA[ಚಿತ್ರದುರ್ಗದಲ್ಲಿ ಗಿರೀಶ್ ಮಟ್ಟಣ್ಣವರ್ ಸ್ಫೋಟಕ ಹೇಳಿಕೆ: ನಿಗೂಢ ಸಾವುಗಳ ಹಿಂದೆ ಅಡಗಿದೆಯಾ ದೊಡ್ಡ ಷಡ್ಯಂತ್ರ?]]></title>
            <link>https://kannada.asianetnews.com/karnataka-districts/girish-mattannavar-demands-justice-in-soujanya-case-exposes-illegal-syndicates-in-chitradurga-press-meet-gdp/articleshow-kp4iqc6</link>
            <guid isPermaLink="true">https://kannada.asianetnews.com/karnataka-districts/girish-mattannavar-demands-justice-in-soujanya-case-exposes-illegal-syndicates-in-chitradurga-press-meet-gdp/articleshow-kp4iqc6</guid>
            <pubDate>Sat, 01 Aug 2026 15:05:40 +0530</pubDate>
            <description><![CDATA[ಗಿರೀಶ್ ಮಟ್ಟಣ್ಣವರ್ ಅವರು, ನಿಗೂಢ ಸಾವುಗಳಂತಹ ಗಂಭೀರ ವಿಷಯಗಳನ್ನು ಮುಚ್ಚಿಹಾಕಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸರ್ಕಾರವು SIT ವರದಿಯನ್ನು ಮುಚ್ಚಿಡುತ್ತಿದ್ದು, ಅದನ್ನು ಬಹಿರಂಗಪಡಿಸಬೇಕು ಮತ್ತು ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಹೊಸ SIT ರಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 'ರಾಷ್ಟ್ರ ರಕ್ಷಣಾ ಪಡೆ' ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧವೂ ಅವರು ಧ್ವನಿ ಎತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01k4gaawvpq97askbbpj9zy6rj,imgname-girish-mattannavar--2--1757189337973.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ:&lt;/strong&gt;&quot;ನಾವು ಸತ್ಯಕ್ಕಾಗಿ ಮತ್ತು ಸಂತ್ರಸ್ತರಿಗೆ ನ್ಯಾಯ ಸಿಗಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೆ, ಪ್ರಶ್ನೆ ಮಾಡುವವರ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ, ತೇಜೋವಧೆ ಮಾಡುವ ಕೆಟ್ಟ ಸಂಸ್ಕೃತಿ ರಾಜ್ಯದಲ್ಲಿ ನಡೆಯುತ್ತಿದೆ. ದಾವಣಗೆರೆಯ ಅಕ್ರಮ ಮೀಟರ್ ಬಡ್ಡಿ ದಂಧೆಯ ವಿರುದ್ಧ ನಾವು ಧ್ವನಿ ಎತ್ತಿದಾಗ ನಮಗೆ ತೀವ್ರ ಅವಮಾನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ ಕಾಮೆಂಟ್&zwnj;ಗಳ ಮೂಲಕ ನಿಂದಿಸಲಾಯಿತು. ರಮಾ ನಾಗರಾಜ್ ಅವರು ಮೊದಲಿನಿಂದಲೂ ಸಮಾಜದಲ್ಲಿ ಗೌರವಾನ್ವಿತ ಸ್ಥಾನದಲ್ಲಿದ್ದವರು ಮತ್ತು ಓಬವ್ವನ ನಾಡಾದ ಚಿತ್ರದುರ್ಗದ ಮಣ್ಣಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಇಡೀ ಗೊಂದಲದ ಜಾಲದಲ್ಲಿ ರಮಾ ನಾಗರಾಜ್ ಮತ್ತು ನಟ ಪ್ರಕಾಶ್ ರಾಜ್ ಅವರು ಅನಗತ್ಯವಾಗಿ ಎಳೆದು ತರಲಾಗಿದೆಯೇ ಹೊರತು, ಅವರು ಈ ಯಾವುದೇ ನೆಗೆಟಿವ್ ವಿಷಯಗಳ ಭಾಗವಾಗಿಲ್ಲ. ಪ್ರಕಾಶ್ ರಾಜ್ ಅವರು ಹಿರಿಯ ನಟರು ಮಾತ್ರವಲ್ಲದೆ, ಸದಾ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವವರು. ಅವರು ಈ ಹಿಂದೆ 'ಕಾಕ್ರೋಚ್ ಪಾರ್ಟಿ' ಹೋರಾಟದಲ್ಲೂ ಸಕ್ರಿಯವಾಗಿ ಭಾಗವಹಿಸಿದ್ದರು. ಆದರೆ, ಮೂಲ ವಿಷಯವನ್ನು ಡೈವರ್ಟ್ ಮಾಡಲು ಕೆಲವು ಕೆಟ್ಟ ಹಿತಾಸಕ್ತಿಗಳು ಹೊಂಚು ಹಾಕಿ ಷಡ್ಯಂತ್ರ ರೂಪಿಸುತ್ತಿವೆ,&quot; ಎಂದು ಗಿರೀಶ್ ಮಟ್ಟಣ್ಣವರ್ ಆಕ್ರೋಶ ಹೊರಹಾಕಿದ್ದಾರೆ.&lt;/p&gt;&lt;h2&gt;ಮುಚ್ಚಿಹಾಕಲ್ಪಟ್ಟ ಸತ್ಯಗಳು&lt;/h2&gt;&lt;p&gt;&quot;ರಾಜ್ಯದಲ್ಲಿ ಭೀಕರ ಮತ್ತು ನಿಗೂಢ ಘಟನೆಗಳು ನಡೆಯುತ್ತಿದ್ದರೂ ಅವುಗಳನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ. ಒಂದೇ ದಿನದಲ್ಲಿ ಆರು ಜನ ನಿಗೂಢವಾಗಿ ಸಾವನ್ನಪ್ಪುತ್ತಾರೆ ಮತ್ತು ಅದೇ ದಿನ ಯಾವುದೇ ಸುದ್ದಿಯಾಗದಂತೆ ಅವರನ್ನು ಹೂತು ಹಾಕಲಾಗುತ್ತದೆ. ಇಂತಹ ಗಂಭೀರ ವಿಷಯಗಳ ಕಡೆಗೆ ಸಾರ್ವಜನಿಕ ಗಮನ ಹರಿದಂತೆ ಮಾಡಲು ಬೇರೆ ಬೇರೆ ವಿವಾದಗಳನ್ನು ಸೃಷ್ಟಿಸಿ ಡೈವರ್ಟ್ ಮಾಡಲಾಗುತ್ತಿದೆ. ಆದರೆ ನೆನಪಿರಲಿ, ಸತ್ಯಕ್ಕೆ ಯಾವತ್ತಿದ್ದರೂ ನ್ಯಾಯ ಸಿಕ್ಕೇ ಸಿಗುತ್ತದೆ. ಚಿನ್ನಯ್ಯ ಎಂಬುವವರು ಹಾಕಿದ್ದ ಅರ್ಜಿಯನ್ನು (ಪಿಟೀಷನ್) ನ್ಯಾಯಾಲಯವು ರದ್ದುಗೊಳಿಸಿದೆ. ಆ ಜಾಗದಲ್ಲಿ ಏನೂ ಸಿಕ್ಕಿಲ್ಲ, ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಲವರು ಈಗ ಕಟ್ಟುಕಥೆಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ.&lt;/p&gt;&lt;p&gt;ಆದರೆ ವಾಸ್ತವವೇ ಬೇರೆ ಇದೆ. ಈಗ ಪತ್ತೆಯಾಗಿರುವ ಅಸ್ಥಿಪಂಜರ ಹಾಗೂ ಶವಗಳಿಗೆ DNA ಮ್ಯಾಚ್ ಆಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಕೇವಲ ಪುರುಷರ ಶವಗಳು ಮಾತ್ರ ಸಿಗುತ್ತಿವೆ ಎಂದು ಸುಳ್ಳು ಮಾಹಿತಿ ಪ್ರಸಾರ ಮಾಡಲಾಗುತ್ತಿತ್ತು, ಆದರೆ ಈಗ ಮಹಿಳೆಯರ ಶವಗಳೂ ಸಹ ಪತ್ತೆಯಾಗುತ್ತಿವೆ. ಆದಿಶೇಷ ಎಫ್&zwnj;ಎಸ್&zwnj;ಎಲ್ (FSL) ವರದಿಯಲ್ಲಿ ಮೃತದೇಹಗಳ ಬುರುಡೆ, ಕೈ ಮತ್ತು ಮೂಳೆಗಳು ಸಿಕ್ಕಿರುವುದು ಸಾಬೀತಾಗಿದೆ. ಇದು ನಾನಾಗಿ ಸೃಷ್ಟಿಸುತ್ತಿರುವ ಕಥೆಯಲ್ಲ, ಸ್ವತಃ ವಿಧಿವಿಜ್ಞಾನ ಪ್ರಯೋಗಾಲಯ (FSL) ನೀಡಿರುವ ಅಧಿಕೃತ ವರದಿ. 22 ವರ್ಷದ ತರುಣನೊಬ್ಬನ ತಲೆಯ ಒಳಗಡೆ ಕೈ ಮತ್ತು ಮೂಳೆಗಳು ಪತ್ತೆಯಾಗಿವೆ ಎಂದರೆ ಇದು ಸ್ಪಷ್ಟವಾಗಿ ಕೊಲೆಯಲ್ಲವೇ? ಕಾಣೆಯಾದವರ ಬಗ್ಗೆ ದೂರು ಕೊಟ್ಟವರ ಮತ್ತು DNA ಮ್ಯಾಚಿಂಗ್ ಆಗಿರುವ ಮೂವರು ಸಂತ್ರಸ್ತರೇ ಇದಕ್ಕೆ ಸಾಕ್ಷಿ ನುಡಿಯುತ್ತಿದ್ದಾರೆ. ಆದರೂ ಕೆಲವರು ಇದನ್ನು 'ಬುರಡೆ ಗ್ಯಾಂಗ್' ಮತ್ತು ಕೇವಲ ಒಂದು ಷಡ್ಯಂತ್ರ ಎಂದು ಹಗುರವಾಗಿ ಮಾತನಾಡುತ್ತಿದ್ದಾರೆ,&quot; ಎಂದು ಮಟ್ಟಣ್ಣವರ್ ವರದಿಗಳ ಸಮೇತ ಪ್ರಶ್ನಿಸಿದ್ದಾರೆ.&lt;/p&gt;&lt;h2&gt;ಸರ್ಕಾರದ ನಡೆ ಹಾಗೂ ತನಿಖಾ ವರದಿಗಳ ಗೌಪ್ಯತೆ ಕುರಿತು ಪ್ರಶ್ನೆ&lt;/h2&gt;&lt;p&gt;&quot;ನಮ್ಮ ಮೇಲೆ ಯಾವುದೇ ಕಾನೂನಾತ್ಮಕ ಕೇಸ್ ದಾಖಲಾಗಿಲ್ಲ ಮತ್ತು ನಾವು ಯಾವುದೇ ದೇವಸ್ಥಾನದ ವಿರುದ್ಧ ಷಡ್ಯಂತ್ರ ನಡೆಸಿಲ್ಲ. ರಾಜ್ಯದಲ್ಲಿ ಎಷ್ಟು ಜನ ನಿಗೂಢವಾಗಿ ಮಿಸ್ಸಿಂಗ್ (ಕಾಣೆಯಾಗಿದ್ದಾರೆ) ಆಗಿದ್ದಾರೆ ಎನ್ನುವುದಕ್ಕೆ ನಮ್ಮ ಬಳಿ ಸ್ಪಷ್ಟ ದಾಖಲೆಗಳಿದ್ದು, ಅವುಗಳನ್ನು ಬಿಡುಗಡೆ ಮಾಡಲು ನಾವು ಸಿದ್ಧರಿದ್ದೇವೆ. ಎರಡು ವರ್ಷದ ಹೆಣ್ಣು ಮಗು ಕಾಲು ಜಾರಿ ಬಿದ್ದು ಸಾವನ್ನಪ್ಪಿದೆ ಎಂದು ವರದಿ ತಯಾರಿಸಲಾಗಿದೆ. ಹಾಗೆಯೇ, ಮುಡಿ ಕೊಟ್ಟ 10 ವರ್ಷದ ಸಣ್ಣ ಹೆಣ್ಣು ಮಗಳು ಮೋಕ್ಷಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ? ನಾವು ಸಮಾಜದಲ್ಲಿ ನಡೆಯುತ್ತಿರುವ ಈ ಅನ್ಯಾಯಗಳನ್ನು ಪ್ರಶ್ನೆ ಮಾಡುತ್ತಿದ್ದೇವೆಯೇ ಹೊರತು, ಯಾರನ್ನೂ ಅಪಮಾನಿಸುವ ಅಥವಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿಲ್ಲ. ಸಾರ್ವಜನಿಕ ವಲಯದಲ್ಲಿ ಎದ್ದಿರುವ ಹಲವು ಪ್ರಶ್ನೆಗಳಿಗೆ ಸಂಬಂಧಿಸಿದಂತೆ SIT (ವಿಶೇಷ ತನಿಖಾ ತಂಡ) ವರದಿ ಎಲ್ಲಿದೆ ಎಂದು ಮಹಿಳಾ ಹೋರಾಟಗಾರ್ತಿಯೊಬ್ಬರು ಕೇಳಿದ್ದಾರೆ. ಆ ವರದಿಯನ್ನು ಮಹಿಳಾ ಆಯೋಗಕ್ಕೆ ಸಲ್ಲಿಕೆ ಮಾಡಲಾಗಿದ್ದು, ಸಾರ್ವಜನಿಕರು ಅಥವಾ ಸಂಬಂಧಪಟ್ಟವರು ಮಹಿಳಾ ಆಯೋಗದಿಂದ ಅದನ್ನು ಪಡೆದುಕೊಳ್ಳಬಹುದು.&lt;/p&gt;&lt;p&gt;ಆದರೆ, ಇಷ್ಟೊಂದು ಸೂಕ್ಷ್ಮ ಹಾಗೂ ಗಂಭೀರವಾಗಿರುವ ತನಿಖಾ ವರದಿಯನ್ನು ಸರ್ಕಾರ ಏಕೆ ಜನರಿಂದ ಮುಚ್ಚಿಟ್ಟುಕೊಂಡಿದೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಈ ಇಡೀ ಪ್ರಕರಣಕ್ಕೆ ರಾಜ್ಯ ಸರ್ಕಾರ ಮತ್ತು ಗೃಹ ಸಚಿವರೇ ನೇರವಾಗಿ ಉತ್ತರಿಸಬೇಕು. ನಮ್ಮನ್ನು ಕೇವಲ 'ಬುರುಡೇ ಗ್ಯಾಂಗ್' ಎಂದು ಕರೆದು, ಇಡೀ ಹೋರಾಟವನ್ನು ಹತ್ತಿಕ್ಕಲು ನಾವು ಬಿಡುವುದಿಲ್ಲ. ನೇತ್ರಾವತಿ ಎನ್ನುವುದು ಸಣ್ಣ ಕೆರೆಯಲ್ಲ, ಅದೊಂದು ವಿಶಾಲವಾದ ನದಿ. ಅಲ್ಲಿ ಏನಾದರೂ ಬಿದ್ದರೆ ಅಥವಾ ಎಸೆದರೆ ಕಿಲೋಮೀಟರ್&zwnj;ಗಳಷ್ಟು ದೂರದವರೆಗೆ ಶವಗಳು ತೇಲಿಕೊಂಡು ಹೋಗುತ್ತವೆ. ಅಲ್ಲಿ ಅಪ್ಪ ಮತ್ತು ಮಗಳಿಬ್ಬರ ಮೃತದೇಹಗಳು ಸಿಕ್ಕಿದ್ದರೂ, ಅದನ್ನು ಕೇವಲ 'ಅನಾಥ ಶವ'ಗಳೆಂದು ದಾಖಲಿಸಿ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಇಂತಹ ಗಂಭೀರ ಲೋಪಗಳನ್ನು ಸರ್ಕಾರ ಏಕೆ ಮುಚ್ಚಿಡುತ್ತಿದೆ? ಮಹಿಳಾ ಆಯೋಗದವರು ಈ ಬಗ್ಗೆ ಏಕೆ ಮೌನ ವಹಿಸಿದ್ದಾರೆ? ಚೌಧರಿ ಅವರು ತನಿಖೆಯ ದಾಖಲೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಏಕೆ ಹಿಂಜರಿಯುತ್ತಿದ್ದಾರೆ? ಹಿಂದೆ ಉಗ್ರಪ್ಪ ಅವರ ವರದಿಯನ್ನು ಮುಚ್ಚಿಟ್ಟಂತೆ, ಈ ವರದಿಯನ್ನು ಮೂಲೆಗೆ ತಳ್ಳಲು ನಾವು ಬಿಡುವುದಿಲ್ಲ. ಈ ಸತ್ಯದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಾವು ದೆಹಲಿಯವರೆಗೂ ಹೋಗಿ ಪ್ರತಿಭಟನೆ ನಡೆಸಲು ಸಿದ್ಧರಿದ್ದೇವೆ. ತನಿಖೆಯ ಹೆಸರಿನಲ್ಲಿ ಎಷ್ಟೋ ಸುಳ್ಳುಗಳನ್ನು ಬರೆದು ಪ್ರಕರಣದ ದಿಕ್ಕು ತಪ್ಪಿಸಲಾಗಿದೆ, ಇನ್ನಾದರೂ ಸರ್ಕಾರ ಸತ್ಯವನ್ನು ಮುಚ್ಚಿಡದೇ ತನಿಖಾ ವರದಿಗಳನ್ನು ಅಧಿಕೃತವಾಗಿ ರಿಲೀಸ್ ಮಾಡಬೇಕು &quot;ಸುಳ್ಳುಗಳ ಸರಣಿಯಿಂದ ಸತ್ಯವನ್ನು ಶಾಶ್ವತವಾಗಿ ಮುಚ್ಚಿಡಲು ಸಾಧ್ಯವಿಲ್ಲ. ಸರ್ಕಾರ ಕೂಡಲೇ SIT ವರದಿಯನ್ನು ಬಹಿರಂಗಪಡಿಸಬೇಕು.&quot; ಎಂದು ಗಿರೀಶ್ ಮಟ್ಟಣ್ಣವರ್ ಒತ್ತಾಯಿಸಿದರು.&lt;/p&gt;&lt;h2&gt;'ರಾಷ್ಟ್ರ ರಕ್ಷಣಾ ಪಡೆ' ಹೆಸರಿನಲ್ಲಿ ಅಕ್ರಮ ದಂಧೆ ಆರೋಪ&lt;/h2&gt;&lt;p&gt;ಸಂಘಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಗಿರೀಶ್, ರಾಜ್ಯಾದ್ಯಂತ 'ರಾಷ್ಟ್ರ ರಕ್ಷಣಾ ಪಡೆ' ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಹಾವಳಿ ಎಬ್ಬಿಸುತ್ತಿದ್ದಾರೆ. ಪುನೀತ್ ಕೆರೆಹಳ್ಳಿ ಮತ್ತು ಅವರ ಟೀಮ್ ದೇಶಭಕ್ತಿಯ ಮುಖವಾಡ ಧರಿಸಿ ಬ್ಲಾಕ್&zwnj;ಮೇಲ್ ಮಾಡುವ ಮೂಲಕ ದೊಡ್ಡ ಮಟ್ಟದ ವಸೂಲಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಹಾಗೂ ಗಿಳಿಯಾರ್ ಅವರಂತಹ ವ್ಯಕ್ತಿಗಳು ಇವರ ಬೆಂಬಲಕ್ಕೆ ನಿಂತಿದ್ದಾರೆ. ಇತ್ತೀಚೆಗೆ ಕಲ್ಬುರ್ಗಿಯಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ, ಅದು ಸ್ವತಃ ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದಿರುವುದು ದುರ್ದೈವ. ಅಷ್ಟಕ್ಕೂ ಈ ರಕ್ಷಣಾ ಪಡೆ ಎನ್ನುವುದು ಯಾವುದೋ ಅಧಿಕೃತ ಸಂಸ್ಥೆಯೇ? ಇವರು ಸರ್ಕಾರದಿಂದ ಅಥವಾ ಕಾನೂನಿನಿಂದ ಏನಾದರೂ ಪರ್ಮಿಷನ್ ತಗೊಂಡಿದ್ದಾರಾ? ನಾವು ಸಮಾಜದಲ್ಲಿ ಇವರು ಮಾಡುತ್ತಿರುವ ತಪ್ಪುಗಳನ್ನು ಪ್ರಶ್ನೆ ಮಾಡಿದರೆ, ನಮಗೆ 'ಪಾಕಿಸ್ತಾನಿ ಫಂಡ್', 'ಚೈನಾ ಫಂಡ್' ಬರುತ್ತಿದೆ ಎಂದು ಸುಳ್ಳು ಆಪಾದನೆ ಹೊರಿಸುತ್ತಾರೆ. ಇವರು ಮಾತ್ರ ದೇಶದಲ್ಲಿರುವ ಮಹಾನ್ ದೇಶಭಕ್ತರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.&lt;/p&gt;&lt;p&gt;ಇದಲ್ಲದೆ, ಇವರು ಪೂಜಾ ಸಾಮಗ್ರಿಗಳನ್ನು ಮಾರುವ 'ಗ್ರಂಥಿಕೆ ಅಂಗಡಿ' ಎಂದು ಬೋರ್ಡ್ ಹಾಕಿ ಒಳಗಡೆ ಕಾನೂನುಬಾಹಿರವಾಗಿ ಮಾಂಸ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದಾರೆ. ಪುನೀತ್ ಕೆರೆಹಳ್ಳಿ ಮತ್ತು ಅವರ ಗ್ಯಾಂಗ್ ಸಮಾಜದ ಸಾಕಷ್ಟು ಹೆಣ್ಣು ಮಕ್ಕಳಿಗೆ ಮೋಸ ಮಾಡಿ ಅನ್ಯಾಯ ಎಸಗುತ್ತಿದ್ದಾರೆ. ಸಮಾಜದ ಶಾಂತಿ ಕದಡುತ್ತಿರುವ ಇವರೆಲ್ಲ ಯಾರು? ಇವರ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಇದುವರೆಗೂ ಕಠಿಣ ಕ್ರಮ ಕೈಗೊಂಡಿಲ್ಲ? ಗೋ ರಕ್ಷಣೆಯ ಪವಿತ್ರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳ ಬಿಸಿನೆಸ್ ಮತ್ತು ದಂಧೆ ಮಾಡುತ್ತಿರುವ ಇವರ ವಿರುದ್ಧ ಗೃಹ ಸಚಿವರು ಕೂಡಲೇ ಕಾನೂನು ಕ್ರಮ ಜರುಗಿಸಬೇಕು,&quot; ಎಂದು ಆಗ್ರಹಿಸಿದರು.&lt;/p&gt;&lt;p&gt;ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ ನೀಡಲು ಒತ್ತಾಯ&lt;/p&gt;&lt;p&gt;&quot;ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ನಟ ಯಶ್, ಐಶ್ವರ್ಯ ರೈ, ದುನಿಯಾ ವಿಜಯ್ ಸೇರಿದಂತೆ ಸ್ಯಾಂಡಲ್&zwnj;ವುಡ್ ಹಾಗೂ ಬಾಲಿವುಡ್&zwnj;ನ ಹಲವು ಗಣ್ಯರು ಪ್ರಕರಣ ನಡೆದ ಆರಂಭದಲ್ಲೇ ಟ್ವೀಟ್ ಮಾಡಿ ಧ್ವನಿ ಎತ್ತಿದ್ದರು. ಆದರೆ, ಈಗ ಹಠಾತ್ತನೆ ಈ ಪ್ರಕರಣದೊಳಗೆ ಪ್ರಕಾಶ್ ರಾಜ್ ಹಾಗೂ ರಮಾ ನಾಗರಾಜ್ ಅವರ ಹೆಸರನ್ನು ತೇಲಿಬಿಟ್ಟಿರುವುದು ಹೇಗೆ? ದೆಹಲಿಯಲ್ಲಿ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೋರಿ ಮತ್ತೆ ಹೋರಾಟ ಕಾವೇರುತ್ತಿರುವ ಸರಿಯಾದ ಸಮಯದಲ್ಲೇ ಈ ಇಬ್ಬರ ಹೆಸರುಗಳನ್ನು ವಿವಾದಕ್ಕೆ ಎಳೆದು ತಂದು ಇಡೀ ವಿಷಯವನ್ನು ಹಳ್ಳ ಹಿಡಿಸಲು ಷಡ್ಯಂತ್ರ ಹೂಡಲಾಗಿದೆ.&lt;/p&gt;&lt;p&gt;ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಲು ಸುಪ್ರೀಂ ಕೋರ್ಟ್ ಈಗಾಗಲೇ ಮಹತ್ವದ ಸೂಚನೆ ನೀಡಿದೆ. ಸ್ವತಃ ಈ ಹಿಂದಿನ ತನಿಖಾಧಿಕಾರಿಗಳೇ 'ಬಂಗಲೇ ಗುಡ್ಡ' ಪ್ರದೇಶದಲ್ಲಿ ನಡೆದಿರುವ ಅಕ್ರಮ ಹಾಗೂ ನಿಗೂಢ ಸಂಗತಿಗಳ ಬಗ್ಗೆ ಸಂಪೂರ್ಣವಾಗಿ ಬರೆದಿದ್ದಾರೆ. ಆದ್ದರಿಂದ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಕೂಡಲೇ ಹೊಸದಾಗಿ ಸಮರ್ಥ ಅಧಿಕಾರಿಗಳನ್ನೊಳಗೊಂಡ SIT ರಚನೆ ಮಾಡಿ, ಸೌಜನ್ಯ ಆತ್ಮಕ್ಕೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ಕನಿಷ್ಠ ಇಷ್ಟೆಲ್ಲಾ ಬೆಳವಣಿಗೆಗಳ ಆದ ಮೇಲಾದರೂ ನಮಗೆ ಯಾವುದೇ ವಿದೇಶಿ ಫಂಡ್ (ಫಾರಿನ್ ಫಂಡ್) ಬಂದಿಲ್ಲ ಎನ್ನುವ ಸತ್ಯ ವಿರೋಧಿಗಳಿಗೆ ತಿಳಿಯುವಂತಾಗಿದೆ. ಸೌಜನ್ಯ ಪ್ರಕರಣ ಮುಗಿದ ಅಧ್ಯಾಯ ಎಂದು ಹೇಳಿ ಮುಚ್ಚಿಹಾಕಲು ಯತ್ನಿಸಿದವರಿಗೆ ಈಗ ಪ್ರಕರಣ ಮತ್ತೆ ಜೀವ ಪಡೆದುಕೊಂಡಿರುವುದು ನಡುಕ ಹುಟ್ಟಿಸಿದೆ. ಸರ್ಕಾರ ಇನ್ನಾದರೂ ವಿಳಂಬ ಮಾಡದೆ ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಬೇಕು,&quot; ಎಂದು ಮಟ್ಟಣ್ಣವರ್ ಸರ್ಕಾರಕ್ಕೆ ಬಲವಾಗಿ ಮನವಿ ಮಾಡಿದರು.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/girish-mattannavar-demands-justice-in-soujanya-case-exposes-illegal-syndicates-in-chitradurga-press-meet-gdp/articleshow-kp4iqc6"/>
        </item>
        <item>
            <title><![CDATA[ಉಲ್ಟಾ ಹೊಡೆದ ಸ್ನೇಹಿತರು, ರಾತ್ರಿ ಇಡೀ ನಿದ್ದೆ ಮಾಡದೆ ಒದ್ದಾಡಿದ ದರ್ಶನ್! ಮಾಫಿ ಸಾಕ್ಷಿಅರ್ಜಿಯಲ್ಲಿ ಯಾವ ಅಂಶವಿದೆ?]]></title>
            <link>https://kannada.asianetnews.com/state/renukaswamy-case-turning-point-actor-darshan-faces-new-legal-trouble-as-co-accused-seeks-approver-status-gdp/articleshow-syhe00a</link>
            <guid isPermaLink="true">https://kannada.asianetnews.com/state/renukaswamy-case-turning-point-actor-darshan-faces-new-legal-trouble-as-co-accused-seeks-approver-status-gdp/articleshow-syhe00a</guid>
            <pubDate>Fri, 07 Aug 2026 09:11:23 +0530</pubDate>
            <description><![CDATA[ನಟ ದರ್ಶನ್&zwnj; ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಆತನ ಆಪ್ತ ಸ್ನೇಹಿತರಾದ ಪ್ರದೋಷ್&zwnj; ಮತ್ತು ವಿನಯ್&zwnj; ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ದರ್ಶನ್&zwnj; ತಮಗೆ ಬೆದರಿಕೆ ಹಾಕಿದ್ದಾಗಿ ಪ್ರದೋಷ್&zwnj; ಅರ್ಜಿಯಲ್ಲಿ ಉಲ್ಲೇಖಿಸಿದ್ದು, ಈ ಬೆಳವಣಿಗೆಯಿಂದ ಜೈಲಿನಲ್ಲಿರುವ ದರ್ಶನ್&zwnj;ಗೆ ತೀವ್ರ ಸಂಕಷ್ಟ ಎದುರಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvst3z4z28htqeyycnpj5fmv,imgname-darshan-new-1782203939999.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ನಟ ದರ್ಶನ್&zwnj; ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಹು ದೊಡ್ಡ ತಿರುವು ಸಿಕ್ಕಿದ್ದು, ಪ್ರಕರಣದಲ್ಲಿ ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ದರ್ಶನ್&zwnj; ಆಪ್ತ ಸ್ನೇಹಿತರಾದ ಪ್ರಕರಣದ 10 ಮತ್ತು 14ನೇ ಆರೋಪಿಗಳಾಗಿರುವ ವಿನಯ್&zwnj; ಹಾಗೂ ಪ್ರದೋಷ್&zwnj; ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್&zwnj;ಗೆ ಈಗ ಹೊಸದೊಂದು ಸಂಕಷ್ಟ ಎದುರಾಗಿದ್ದು, ತೀವ್ರ ಆತಂಕವನ್ನು ಸೃಷ್ಟಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ದರ್ಶನ್ ಆಪ್ತನಾಗಿರುವ ಪ್ರದೂಷ್, ನ್ಯಾಯಾಲಯದಲ್ಲಿ &lsquo;ಮಾಫಿ ಸಾಕ್ಷಿ&rsquo; (Approver) ಆಗಲು ಅರ್ಜಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ.&lt;/p&gt;&lt;p&gt;ತಮ್ಮದೇ ಆಪ್ತ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾದರೆ ಕಾನೂನುಬದ್ಧವಾಗಿ ತಮಗೆ ದೊಡ್ಡ ಹಿನ್ನಡೆಯಾಗಲಿದೆ ಎಂಬ ಭೀತಿಯಿಂದ ನಟ ದರ್ಶನ್ ಜೈಲಿನಲ್ಲಿ ವಿಲವಿಲನೆ ಒದ್ದಾಡುತ್ತಿದ್ದಾರೆ. ಪ್ರದೂಷ್ ಅರ್ಜಿ ಸಲ್ಲಿಸಿದ ಸುದ್ದಿ ತಿಳಿಯುತ್ತಿದ್ದಂತೆ, ದರ್ಶನ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ.&lt;/p&gt;&lt;h2&gt;ಊಟ-ನಿದ್ರೆ ತೊರೆದು ಮೌನಕ್ಕೆ ಶರಣಾದ &lsquo;ಡಿ ಬಾಸ್&rsquo;&lt;/h2&gt;&lt;p&gt;ಗುರುವಾರ ರಾತ್ರಿ ಜೈಲು ಸಿಬ್ಬಂದಿ ನೀಡಿದ ಊಟವನ್ನೂ ಮಾಡದ ದರ್ಶನ್, ತೀವ್ರ ಚಿಂತಾಕ್ರಾಂತರಾಗಿ ಏಕಾಂಗಿಯಾಗಿ ಕುಳಿತಿದ್ದರು. ಇತರ ಸಹ-ಬಂಧಿಗಳೊಂದಿಗೆ ಯಾವುದೇ ಮಾತುಕತೆ ನಡೆಸದೆ ಮೌನಕ್ಕೆ ಶರಣಾಗಿದ್ದ ದರ್ಶನ್, ರಾತ್ರಿಯಿಡೀ ನಿದ್ರೆ ಮಾಡದೆ ಜಾಗರಣೆ ಮಾಡಿ ಕಣ್ಣೇ ಮುಚ್ಚಿಲ್ಲವಂತೆ. ಈಗಾಗಲೇ ಮಾನಸಿಕ ಹಾಗೂ ದೈಹಿಕವಾಗಿ ಸಾಕಷ್ಟು ಕುಗ್ಗಿರುವ ದರ್ಶನ್&zwnj;ಗೆ, ಈ ಹೊಸ ಬೆಳವಣಿಗೆಯಿಂದಾಗಿ ಪ್ರಕರಣದ ಭವಿಷ್ಯ ಏನಾಗುವುದೋ ಎಂಬ ಭಯ ಹೆಚ್ಚಾಗಿದೆ.&lt;/p&gt;&lt;p&gt;ಶುಕ್ರವಾರ ಬೆಳಿಗ್ಗೆ ತಮ್ಮ ಬ್ಯಾರಕ್&zwnj;ನಲ್ಲಿಯೇ ಕೆಲಕಾಲ ವಾಕ್ ಮಾಡಿದ ದರ್ಶನ್, ದೇವರ ಫೋಟೋಗೆ ಕೈಮುಗಿದು ಕಾಫಿ ಸೇವಿಸಿದರು. ಆ ನಂತರ ದಿನಪತ್ರಿಕೆಯಲ್ಲಿ ಪ್ರಕಟವಾಗಿದ್ದ ತಮ್ಮ ಪ್ರಕರಣದ ಸುದ್ದಿಯನ್ನು ಓದಿ, ಮತ್ತಷ್ಟು ಕಂಗಾಲಾಗಿ ಮತ್ತೆ ಮೌನಕ್ಕೆ ಜಾರಿದ್ದಾರೆ. ಒಟ್ಟಿನಲ್ಲಿ, ಆಪ್ತನ ನಿರ್ಧಾರದಿಂದಾಗಿ ದರ್ಶನ್ ಹಾಗೂ ಅವರ ಗ್ಯಾಂಗ್&zwnj;ಗೆ ಜೈಲಿನಲ್ಲಿ ಸಂಕಷ್ಟದ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ.&lt;/p&gt;&lt;h2&gt;ಮಾಫಿ ಅರ್ಜಿಯಲ್ಲಿ ಏನೇನು ಉಲ್ಲೇಖವಿದೆ?&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್&zwnj; ಸೇರಿದಂತೆ ಎಲ್ಲ ಆರೋಪಿಗಳು ವಹಿಸಿದ ಪಾತ್ರವನ್ನು ಅರ್ಜಿಯಲ್ಲಿ ಪ್ರದೋಷ್&zwnj; ವಿವರಿಸಿದ್ದಾನೆ. ಅಲ್ಲದೆ, &lsquo;ರೇಣುಕಾಸ್ವಾಮಿ ಮೊಬೈಲ್&zwnj;ನಲ್ಲಿದ್ದ ಮೆಸೇಜ್&zwnj;ಗಳನ್ನು ಓದಿದ್ದು ಬಿಟ್ಟರೆ ಯಾವುದೇ ಅಪರಾಧ ಕೃತ್ಯ ಎಸಗಿಲ್ಲ. ಸಾಯಿಸುವುದಾಗಿ ದರ್ಶನ್&zwnj; ಬೆದರಿಸಿದ ಹಿನ್ನೆಲೆಯಲ್ಲಿ ಆತನಿಗೆ ಸಹಾಯ ಮಾಡಿದೆ. ಆದ್ದರಿಂದ ನನ್ನನ್ನು ಕ್ಷಮಿಸಿ ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು. ಪ್ರಾಸಿಕ್ಯೂಷನ್&zwnj; ಪರ ನಾನು ಸಾಕ್ಷ್ಯ ನುಡಿಯುತ್ತೇನೆ&rsquo; ಎಂದು ಪ್ರದೋಷ್&zwnj; ಅರ್ಜಿಯಲ್ಲಿ ಕೋರಿದ್ದಾನೆ.&lt;/p&gt;&lt;p&gt;ಪ್ರಕರಣದ ತನಿಖಾಧಿಕಾರಿಗಳಾದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರನ್ನು ಪ್ರತಿನಿಧಿಸುತ್ತಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್&zwnj; ಲಿಖಿತವಾಗಿಯೇ ಈ ಅರ್ಜಿಗೆ ಸಮ್ಮತಿ ನೀಡಿದ್ದಾರೆ. ಮತ್ತೊಂದೆಡೆ, &lsquo;ಈ ಅರ್ಜಿಯನ್ನು ಪುರಸ್ಕರಿಸಬಾರದು. ಅರ್ಜಿ ಸಂಬಂಧ ತಮ್ಮ ವಾದವನ್ನು ಮಂಡಿಸಲು ಅವಕಾಶ ಕೊಡಬೇಕು&rsquo; ಎಂದು ದರ್ಶನ್&zwnj; ಹಾಗೂ ಇತರೆ ಆರೋಪಿಗಳು ನ್ಯಾಯಾಲಯವನ್ನು ಬಲವಾಗಿ ಕೋರಿದ್ದಾರೆ. ಹೀಗಾಗಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ವಿನಯ್&zwnj; ಮತ್ತು ಪ್ರದೋಷ್&zwnj; ಸಲ್ಲಿಸಿರುವ ಅರ್ಜಿ ಸಂಬಂಧ ಇತರೆ ಆರೋಪಿಗಳ ವಾದ ಆಲಿಸಬೇಕೆ ಅಥವಾ ಬೇಡವೇ ಎಂಬುದರ ಕುರಿತು ಆ.10ರಂದು ಆದೇಶ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿ ವಿಚಾರಣೆ ಮುಂದೂಡಿದೆ.&lt;/p&gt;&lt;h2&gt;ಕೃತ್ಯದ ಪಾತ್ರದ ಬಗ್ಗೆ ಉಲ್ಲೇಖ&lt;/h2&gt;&lt;p&gt;ಪ್ರದೋಷ್&zwnj; ತನ್ನ ಅರ್ಜಿಯಲ್ಲಿ 2003ರಿಂದ ಆರಂಭವಾದ ದರ್ಶನ್&zwnj; ಜೊತೆಗಿನ ಸ್ನೇಹ, 2024ರ ಜೂ.9ರಂದು ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್&zwnj;, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ವಹಿಸಿದ ಪಾತ್ರವನ್ನು ವಿವರಿಸಿದ್ದಾರೆ. ಅಲ್ಲದೇ, ರೇಣುಕಾಸ್ವಾಮಿ ಮೇಲೆ ದರ್ಶನ್&zwnj; ಮೆರೆದ ಕ್ರೌರ್ಯ, ಕೊಲೆ ನಂತರ ಪೊಲೀಸರ ಮುಂದೆ ಕೆಲ ಆರೋಪಿಗಳು ಶರಣಾಗುವ ವಿಚಾರದಲ್ಲಿ ನಡೆಸಿದ ಮಾತುಕತೆಗಳನ್ನು ಪ್ರದೋಷ್&zwnj; ತಿಳಿಸಿದ್ದಾರೆ.&lt;/p&gt;&lt;h2&gt;ಪ್ರದೋಷ್&zwnj; ಹೇಳಿದ್ದೇನು?:&lt;/h2&gt;&lt;p&gt;ಇನ್ನು &lsquo;ರೇಣುಕಾಸ್ವಾಮಿ ಇನ್&zwnj;ಸ್ಟಾಗ್ರಾಂ, ಫೇಸ್&zwnj;ಬುಕ್&zwnj; ಖಾತೆಯಲ್ಲಿ ಕಳುಹಿಸಿದ ಸಂದೇಶಗಳನ್ನು ನಾನು ಓದಿದೆಯಷ್ಟೇ. ವಾಸ್ತವವಾಗಿ ಕೊಲೆ ಘಟನೆ ನಡೆಯದಂತೆ ನಾನು ತಡೆಯಲು ಮುಂದಾದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುತ್ತಿದ್ದಾಗ ದರ್ಶನ್&zwnj; ತಡೆಯಲು ಪ್ರಯತ್ನಿಸಿದೆ. ದರ್ಶನ್&zwnj; ನನ್ನ ಮಾತು ಕೇಳಲಿಲ್ಲ. ಕೊಲೆ ನಡೆದ ನಂತರ ದರ್ಶನ್&zwnj; ನನ್ನ ಬಳಿ ಸಹಾಯ ಕೇಳಿದ್ದಲ್ಲದೆ, ಸಹಾಯ ಮಾಡದೆ ಹೋದರೆ ಗನ್&zwnj;ನಿಂದ ಗುಂಡು ಹಾರಿಸಿ ಸಾಯಿಸುವುದಾಗಿ ದರ್ಶನ್&zwnj; ಬೆದರಿಸಿದರು. ಹಾಗಾಗಿ ನಾನು ದರ್ಶನ್&zwnj;ಗೆ ಸಹಾಯ ಮಾಡಿದೆ&rsquo; ಎಂದು ಹೇಳಿರುವ ಪ್ರದೋಷ್&zwnj;, &lsquo;ನನ್ನನ್ನು ಕ್ಷಮಿಸಬೇಕು. ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು. ಪ್ರಾಸಿಕ್ಯೂಷನ್&zwnj;ಗೆ (ತನಿಖಾಧಿಕಾರಿಗಳ ತನಿಖೆ ಹಾಗೂ ವಿಚಾರಣೆಗೆ) ಪೂರಕವಾಗಿ ಸಾಕ್ಷ್ಯವನ್ನು ನುಡಿಯುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು&rsquo; ಎಂದು ಅರ್ಜಿಯಲ್ಲಿ ಕೋರಿದ್ದಾರೆ.&lt;/p&gt;&lt;h2&gt;ವಿನಯ್&zwnj; ಕೂಡ ಮಾಫಿಸಾಕ್ಷಿ:&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ನಡೆಯುವ ಮುನ್ನ ದರ್ಶನ್&zwnj; ಪಾರ್ಟಿ ನಡೆಸಿದ ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್&zwnj; ರೆಸ್ಟೋರೆಂಟ್&zwnj;ನ ಮಾಲೀಕನೂ ಆದ ಪ್ರಕರಣದ 10ನೇ ಆರೋಪಿ ವಿನಯ್&zwnj; ಸಹ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿ ಕುರಿತು ಪ್ರತಿಕ್ರಿಯಿಸಿದ ಎಸ್&zwnj;ಪಿಪಿ ಪ್ರಸನ್ನ ಕುಮಾರ್&zwnj;, ಅರ್ಜಿಯಲ್ಲಿ ವಿನಯ್&zwnj; ವಿವರಗಳನ್ನು ನೀಡಿಲ್ಲ. ಆತನ ಅರ್ಜಿಯನ್ನು ವಿಚಾರಣೆಗೆ ಬಾಕಿ ಇಡಬೇಕು ಎಂದು ಕೋರಿದ್ದಾರೆ.&lt;/p&gt;&lt;h2&gt;ಅರ್ಜಿಗೆ ಆಕ್ಷೇಪ:&lt;/h2&gt;&lt;p&gt;ಈ ಮಧ್ಯೆ ಪ್ರದೋಷ್&zwnj; ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿರುವ ದರ್ಶನ್&zwnj; ಹಾಗೂ ಇತರೆ ಆರೋಪಿಗಳು, ಅರ್ಜಿಯ ಕುರಿತು ವಾದ ಮಂಡಿಸಲು ತಮಗೆ ಹಕ್ಕು ಕಲ್ಪಿಸಬೇಕು ಎಂದು ಕೋರಿದರು. ಆರೋಪಿಗಳ ಈ ಮನವಿಗೆ ಆಕ್ಷೇಪಿಸಿದ ಎಸ್&zwnj;ಪಿಪಿ ಪ್ರಸನ್ನ ಕುಮಾರ್&zwnj; ಅವರು, ಪ್ರದೋಷ್&zwnj;ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್&zwnj; ಒಪ್ಪಿಗೆ ನೀಡಿದೆ. ಆತ ಪ್ರಾಸಿಕ್ಯೂಷನ್&zwnj;ಗೆ ಬೆಂಬಲಿಸುವುದಾಗಿ ತಿಳಿಸಿದ್ದಾನೆ. ಆತ ಸತ್ಯ ನುಡಿಯುತ್ತಿದ್ದಾನೆಯೋ ಅಥವಾ ಇಲ್ಲವೇ ಎಂಬುದನ್ನು ಪ್ರಾಸಿಕ್ಯೂಷನ್&zwnj; ಖಚಿತಪಡಿಸಬೇಕು. ಇತರೆ ಆರೋಪಿಗಳ ವಿರುದ್ಧವೇ ಪ್ರದೋಷ್&zwnj; ಸಾಕ್ಷ್ಯ ನುಡಿಯುವುದರಿಂದ, ಆತನ ಅರ್ಜಿ ಪರಿಗಣಿಸುವ ವಿಚಾರದಲ್ಲಿ ಆರೋಪಿಗಳ ವಾದ ಆಲಿಸುವ ಅಗತ್ಯವೇ ಇಲ್ಲ ಎಂದು ನ್ಯಾಯಾಲಯಕ್ಕೆ ಪ್ರತಿಪಾದಿಸಿದರು. ಅಂತಿಮವಾಗಿ ನ್ಯಾಯಾಲಯವು ಈ ಎಲ್ಲಾ ವಾದ-ಪ್ರತಿವಾದ ಆಲಿಸಿ, ಆ.10ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತು.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/renukaswamy-case-turning-point-actor-darshan-faces-new-legal-trouble-as-co-accused-seeks-approver-status-gdp/articleshow-syhe00a"/>
        </item>
        <item>
            <title><![CDATA[ದರ್ಶನ್‌ಗೆ ಮತ್ತಷ್ಟು ಸಂಕಷ್ಟ, ಪ್ರದೋಷ್ ಬಳಿಕ ಕೋರ್ಟ್‌ಲ್ಲಿ ಸತ್ಯ ಹೇಳಲು ಮುಂದಾದ ಕುಚುಕು ದೋಸ್ತ್ ವಿನಯ್, ರವಿಶಂಕರ್!]]></title>
            <link>https://kannada.asianetnews.com/state/renukaswamy-case-actor-darshan-in-trouble-as-accused-pradosh-vinay-and-ravishankar-seek-to-become-approvers-gdp/articleshow-v84wikv</link>
            <guid isPermaLink="true">https://kannada.asianetnews.com/state/renukaswamy-case-actor-darshan-in-trouble-as-accused-pradosh-vinay-and-ravishankar-seek-to-become-approvers-gdp/articleshow-v84wikv</guid>
            <pubDate>Thu, 06 Aug 2026 12:47:22 +0530</pubDate>
            <description><![CDATA[ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ಇದೀಗ ನಟ ದರ್ಶನ್ ಆಪ್ತರಾದ ವಿನಯ್ ಮತ್ತು ರವಿಶಂಕರ್ ಕೂಡ ಮಾಫಿ ಸಾಕ್ಷಿಯಾಗಲು ನಿರ್ಧರಿಸಿದ್ದಾರೆ. ಇದು ಜೈಲಿನಲ್ಲಿರುವ ದರ್ಶನ್&zwnj;ಗೆ ಮತ್ತಷ್ಟು ಕಾನೂನು ಸಂಕಷ್ಟವನ್ನು ತಂದೊಡ್ಡಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzaym0bzhp0cgw17dzx8yx23,imgname-vinay-ravishankar-darshan-renukaswamy-case-1786000310655.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದ್ದು, ಪ್ರಕರಣದ ವಿಚಾರಣೆಯಲ್ಲಿ ಈಗ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಓರ್ವ ಈಗಾಗಲೇ ಮಾಫಿ ಸಾಕ್ಷಿಗೆ ಅರ್ಜಿ ಸಲ್ಲಿಸಿ ವಿಚಾರಣೆ ಆರಂಭವಾಗಿದ್ದು ಇದೀಗ ಮತ್ತಿಬ್ಬರು ಮಾಫಿ ಸಾಕ್ಷಿಗೆ ನಿರ್ಧರಿಸಿ ಅರ್ಜಿ ಸಲ್ಲಿಸಲು ಮುಂದಾಗಿದ್ದು, ಇದೀಗ ಬೇಲ್ ಸಿಗದೆ ಜೈಲಿನಲ್ಲಿರುವ ನಟ ದರ್ಶನ್&zwnj;ಗೆ ಮತ್ತಷ್ಟು ಕಾನೂನು ಸಂಕಷ್ಟ ತಂದಿಟ್ಟಿದೆ. ಪ್ರಕರಣದ 14ನೇ ಆರೋಪಿಯಾಗಿ (A-14) ಜೈಲು ಸೇರಿರುವ ಪ್ರದೋಶ್&zwnj;, ತನ್ನನ್ನು &lsquo;ಮಾಫಿ ಸಾಕ್ಷಿ&rsquo; (ಅಪ್ರೂವರ್) ಆಗಿ ಪರಿಗಣಿಸುವಂತೆ ಕೋರಿ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ.&lt;/p&gt;&lt;p&gt;ಈ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರದೋಶ್&zwnj;ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಪ್ರದೋಶ್ ಪರ ವಕೀಲ ದಿವಾಕರ್, &quot;ಮೊದಲು ನಮ್ಮ ಕಕ್ಷಿದಾರರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿ. ಆ ನಂತರ ಪ್ರಾಸಿಕ್ಯೂಷನ್ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿ&quot; ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.&lt;/p&gt;&lt;p&gt;ಇದೇ ವೇಳೆ ಪ್ರಕರಣದಲ್ಲಿ ಜಾಮೀನು ಸಿಗದೆ ಜೈಲಿನಲ್ಲಿರುವ ನಟ ದರ್ಶನ್ ಅವರ ಆಪ್ತ, 10ನೇ ಆರೋಪಿ (A-10) ವಿನಯ್ ರಾಘವೇಂದ್ರ ಅಲಿಯಾಸ್ ವಿನಯ್ ಹಾಗೂ 8ನೇ ಆರೋಪಿ (A-8) ರವಿಶಂಕರ್ ಕೂಡ ತಮ್ಮನ್ನೂ ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಅವರ ಪರ ವಕೀಲರು ಮಧ್ಯಾಹ್ನದ ವೇಳೆಗೆ ಕೋರ್ಟ್&zwnj;ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆದರೆ, ಪ್ರದೋಶ್ ಪರ ವಕೀಲರು ತಮ್ಮ ಅರ್ಜಿಯೊಂದಿಗೆ ಇತರ ಆರೋಪಿಗಳ ಮನವಿಯನ್ನು ಸೇರಿಸದಂತೆ ಕೋರಿದ ಕಾರಣ, ನ್ಯಾಯಾಲಯ ವಿಚಾರಣೆಯನ್ನು ಕೆಲ ಕಾಲ ಮುಂದೂಡಿತು.&lt;/p&gt;&lt;h2&gt;ಸ್ಟೋನಿ ಬ್ರೂಕ್ ಪಬ್&zwnj; ಮಾಲೀಕ ವಿನಯ್ ದರ್ಶನ್ ಅತ್ಯಾಪ್ತ&lt;/h2&gt;&lt;p&gt;ಆರ್.ಆರ್. ನಗರದ &lsquo;ಸ್ಟೋನಿ ಬ್ರೂಕ್&rsquo; ಪಬ್ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ವಿನಯ್ (A-10) ಮನೆ ಹಾಗೂ ಪಬ್&zwnj;ನಲ್ಲಿ ದರ್ಶನ್ ಗ್ಯಾಂಗ್ ಸಂಚು ರೂಪಿಸಿತ್ತು ಎನ್ನಲಾಗಿದೆ. ಕೊಲೆಯ ದಿನ ಪ್ರದೋಶ್ ಕೂಡ ಈ ಪಬ್&zwnj;ನಿಂದ ದರ್ಶನ್ ಜೊತೆಗೆ ಪಟ್ಟಣಗೆರೆಯ ಶೆಡ್&zwnj;ಗೆ ಹೋಗಿದ್ದ. ಶೆಡ್&zwnj;ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವಾಗ ಪ್ರದೋಶ್ ಸ್ಥಳದಲ್ಲೇ ಇದ್ದು, ಹೊಡೆಯೋದು ಸಾಕು ನಿಲ್ಲಿಸಿ, ಸತ್ತು ಹೋಗ್ತಾನೆʼ ಎಂದು ತಡೆದಿದ್ದ ಎಂದು ಪೊಲೀಸರ ತನಿಖಾ ವರದಿಯಲ್ಲಿದೆ. ಅಲ್ಲದೆ, ಕೊಲೆಯ ನಂತರ ಶವ ಸಾಗಿಸಲು ಸಹಾಯ ಕೋರಿ ಸಬ್ ಇನ್ಸ್ಪೆಕ್ಟರ್ ಒಬ್ಬರಿಗೆ ಪ್ರದೋಶ್ ಫೋನ್ ಮಾಡಿದ್ದ ಎನ್ನಲಾಗಿದೆ.&lt;/p&gt;&lt;h2&gt;ಡಿಲೀಟ್ ಆಗಿದ್ದ ಎಫ್&zwnj;ಎಸ್&zwnj;ಎಲ್ ಡೇಟಾ ರಿಟ್ರೀವ್&lt;/h2&gt;&lt;p&gt;ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ವಿನಯ್ ಸೇರಿದಂತೆ ಎಲ್ಲಾ ಆರೋಪಿಗಳ ಮೊಬೈಲ್&zwnj;ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೃತ್ಯ ನಡೆದ ಸ್ಥಳದಲ್ಲಿದ್ದ ದೃಶ್ಯಗಳು, ಹಲ್ಲೆ ನಡೆಸಿದ ಸಂದರ್ಭದಲ್ಲಿ ತೆಗೆದಿದ್ದ ಫೋಟೋಗಳು ಹಾಗೂ ಡಿಲೀಟ್ ಮಾಡಲಾಗಿದ್ದ ಪ್ರಮುಖ ಮಾಹಿತಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಯಶಸ್ವಿಯಾಗಿ ರಿಟ್ರೀವ್ ಮಾಡಿದ್ದಾರೆ. ಈ ಡಿಜಿಟಲ್ ಸಾಕ್ಷ್ಯಗಳು ಅತೀ ಹೆಚ್ಚು ವಿನಯ್ ಫೋನ್&zwnj; ನಲ್ಲಿ ಇತ್ತು ಎನ್ನಲಾಗಿದೆ&lt;/p&gt;&lt;h2&gt;ಯಾರು ಈ ರವಿಶಂಕರ್?&lt;/h2&gt;&lt;p&gt;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-8 ಆರೋಪಿಯಾಗಿರುವ ರವಿಶಂಕರ್ (Ravi Shankar), ಚಿತ್ರದುರ್ಗದ ಮೂಲದವನಾಗಿದ್ದು, ಡಿ ಗ್ಯಾಂಗ್&zwnj; ಅಭಿಮಾನಿ ಸಂಘದವನು ನಟ ದರ್ಶನ್ ಗ್ಯಾಂಗ್&zwnj;ನಿಂದ ಅಪಹರಣಕ್ಕೊಳಗಾದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲು ಬಳಸಲಾದ ಟೊಯೋಟಾ ಇಟಿಯೋಸ್ (Toyota Etios) ಕಾರನ್ನು ಚಾಲನೆ ಮಾಡಿದ್ದ ವ್ಯಕ್ತಿ. ಕೃತ್ಯದ ಬಳಿಕ ಕೇಸ್&zwnj; ಮುಚ್ಚಿ ಹಾಕಲು ಪೊಲೀಸರಿಗೆ ಶರಣಾಗಿದ್ದವರಲ್ಲಿ ಒಬ್ಬ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/renukaswamy-case-actor-darshan-in-trouble-as-accused-pradosh-vinay-and-ravishankar-seek-to-become-approvers-gdp/articleshow-v84wikv"/>
        </item>
        <item>
            <title><![CDATA[ಚಿತ್ರದುರ್ಗ: 'ದೇವರ ಕೋಣ'ದ ಪ್ರಾಣ ಉಳಿಸಿದ ಯಶಸ್ವಿ ರುಮಿನೊಟಮಿ ಶಸ್ತ್ರಚಿಕಿತ್ಸೆ, ಹೊಟ್ಟೆಯಿಂದ 6 ಬಕೆಟ್ ಕೊಳೆತ ಆಹಾರ ತೆಗೆದ ವೈದ್ಯರು!]]></title>
            <link>https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e</link>
            <guid isPermaLink="true">https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e</guid>
            <pubDate>Sat, 18 Jul 2026 10:47:10 +0530</pubDate>
            <description><![CDATA[ಚಿತ್ರದುರ್ಗದ ನಾಗಸಮುದ್ರ ಗ್ರಾಮದಲ್ಲಿ ಅತಿಯಾಗಿ ಅನ್ನ-ಪಾಯಸ ಸೇವಿಸಿ ಅಸ್ವಸ್ಥಗೊಂಡಿದ್ದ ದೇವರ ಕೋಣಕ್ಕೆ ಪಶುವೈದ್ಯರು ಯಶಸ್ವಿ 'ರುಮಿನೊಟಮಿ' ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೋಣನ ಹೊಟ್ಟೆಯಿಂದ ಸುಮಾರು 6 ಬಕೆಟ್ ಜೀರ್ಣವಾಗದ ಆಹಾರವನ್ನು ಹೊರತೆಗೆದು, ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxst62khamxt1hvt91143axa,imgname-buffalo-ruminotomy-surgery-in-chitradurga-1784351492720.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಅನ್ನ ಹಾಗೂ ಪಾಯಸ ಅತಿಯಾಗಿ ತಿಂದು ಜೀರ್ಣಿಸಿಕೊಳ್ಳಲಾಗದೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ &lsquo;ದೇವರ ಕೋಣ&rsquo;ನಿಗೆ ಪಶುವೈದ್ಯರು ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ, ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಪಶು ಇಲಾಖೆಯ ಸಕಾಲಿಕ ಹಾಗೂ ಅತ್ಯಂತ ಜವಾಬ್ದಾರಿಯುತ ಈ ಕಾರ್ಯಕ್ಕೆ ನಾಗಸಮುದ್ರ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.&lt;/p&gt;&lt;h2&gt;10 ದಿನಗಳಿಂದ ಜೀರ್ಣವಾಗದ ಆಹಾರ: ಗಂಭೀರ ಸ್ಥಿತಿಯಲ್ಲಿದ್ದ ಕೋಣ&lt;/h2&gt;&lt;p&gt;ನಾಗಸಮುದ್ರ ಗ್ರಾಮದಲ್ಲಿ ದೇವರಿಗೆ ಬಿಟ್ಟಿದ್ದ ಕೋಣವು ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಕ್ತರು ನೀಡಿದ್ದ ಅನ್ನ ಮತ್ತು ಪಾಯಸವನ್ನು ಅತಿಯಾಗಿ ಸೇವಿಸಿತ್ತು. ಆದರೆ, ಕಳೆದ 10 ದಿನಗಳಿಂದ ಆ ಆಹಾರ ಜೀರ್ಣವಾಗದೆ ಕೋಣ ತೀವ್ರ ಅಸ್ವಸ್ಥಗೊಂಡಿತ್ತು. ಯಾವುದೇ ಆಹಾರ ಅಥವಾ ನೀರನ್ನು ತೆಗೆದುಕೊಳ್ಳಲಾಗದೆ ಕೋಣದ ಹೊಟ್ಟೆ ಉಬ್ಬರಿಸಿಕೊಂಡು, ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಹಳ್ಳಿಯ ಆಸ್ತಿಯಂತಿದ್ದ ದೇವರ ಕೋಣದ ಈ ಸ್ಥಿತಿಯನ್ನು ಕಂಡು ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದರು.&lt;/p&gt;&lt;h2&gt;ಪಶುವೈದ್ಯರ ನೇತೃತ್ವದಲ್ಲಿ &lsquo;ರುಮಿನೊಟಮಿ&rsquo; ಶಸ್ತ್ರಚಿಕಿತ್ಸೆ ಯಶಸ್ವಿ&lt;/h2&gt;&lt;p&gt;ಕೋಣದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪಶುಪಾಲನಾ ಇಲಾಖೆಯ ಅಧಿಕಾರಿಗಳು ನಾಗಸಮುದ್ರ ಗ್ರಾಮಕ್ಕೆ ಧಾವಿಸಿದರು. ಪಶು ಇಲಾಖೆಯ ಸಹಾಯಕ ನಿರ್ದೇಶಕರಾದ (ADA) ಡಾ. ವಿಜಯಕುಮಾರ್ ಅವರ ನೇತೃತ್ವದ ವೈದ್ಯರ ತಂಡವು ತಕ್ಷಣವೇ ಕಾರ್ಯಪ್ರವೃತ್ತವಾಯಿತು.&lt;/p&gt;&lt;p&gt;ಕೋಣಕ್ಕೆ ಜೀರ್ಣಾಂಗವ್ಯೂಹದ ಸಮಸ್ಯೆಯಾಗಿರುವುದನ್ನು ಪತ್ತೆಹಚ್ಚಿದ ವೈದ್ಯರು, ಅದಕ್ಕೆ &lsquo;ರುಮಿನೊಟಮಿ&rsquo; (Ruminotomy - ಜಾನುವಾರುಗಳ ಹೊಟ್ಟೆಯ ಮೊದಲ ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆರೆಯುವ ಪ್ರಕ್ರಿಯೆ) ಮಾಡಲು ನಿರ್ಧರಿಸಿದರು. ಅತ್ಯಂತ ಜಾಗರೂಕತೆಯಿಂದ ನಡೆಸಲಾದ ಈ ಶಸ್ತ್ರಚಿಕಿತ್ಸೆಯು ಸಂಪೂರ್ಣವಾಗಿ ಯಶಸ್ವಿಯಾಗಿದೆ.&lt;/p&gt;&lt;h2&gt;ಹೊಟ್ಟೆಯಿಂದ &amp;nbsp;ಹೊರತೆಗೆದ್ರು 6 ಬಕೆಟ್ ಆಹಾರ!&lt;/h2&gt;&lt;p&gt;ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪಶುವೈದ್ಯರು ಕೋಣದ ಹೊಟ್ಟೆಯನ್ನು ತೆರೆದಾಗ, ಅಲ್ಲಿ ಕಳೆದ 10 ದಿನಗಳಿಂದ ಜೀರ್ಣವಾಗದೆ ಕೊಳೆಯುತ್ತಿದ್ದ ಅನ್ನ ಮತ್ತು ಪಾಯಸದ ಮಿಶ್ರಣ ಪತ್ತೆಯಾಗಿದೆ. ವೈದ್ಯರು ಸತತ ಪ್ರಯತ್ನ ನಡೆಸಿ ಕೋಣದ ಹೊಟ್ಟೆಯಿಂದ ಬರೋಬ್ಬರಿ 6 ಬಕೆಟ್&zwnj;ಗಳಷ್ಟು ಜೀರ್ಣವಾಗದ ತ್ಯಾಜ್ಯ ಆಹಾರವನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.&lt;/p&gt;&lt;h2&gt;ಕೋಣದ ಆರೋಗ್ಯದಲ್ಲಿ ಚೇತರಿಕೆ: ವೈದ್ಯರ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ&lt;/h2&gt;&lt;p&gt;ಶಸ್ತ್ರಚಿಕಿತ್ಸೆಯ ನಂತರ ಕೋಣನಿಗೆ ಅಗತ್ಯ ಔಷಧೋಪಚಾರ ಹಾಗೂ ಗ್ಲುಕೋಸ್ ನೀಡಲಾಗಿದ್ದು, ಪ್ರಸ್ತುತ ಅದರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಕೋಣವು ಪ್ರಾಣಾಪಾಯದಿಂದ ಪಾರಾಗಿದ್ದು, ಸಹಜ ಸ್ಥಿತಿಗೆ ಮರಳುತ್ತಿದೆ. ತಮ್ಮ ನೆಚ್ಚಿನ ದೇವರ ಕೋಣವನ್ನು ಕಷ್ಟದ ಪರಿಸ್ಥಿತಿಯಲ್ಲೂ ಶಸ್ತ್ರಚಿಕಿತ್ಸೆಯ ಮೂಲಕ ಬದುಕುಳಿಸಿದ ಡಾ. ವಿಜಯಕುಮಾರ್ ಹಾಗೂ ಅವರ ಪಶುವೈದ್ಯಕೀಯ ತಂಡದ ಅಸಾಧಾರಣ ಕಾರ್ಯಕ್ಕೆ ನಾಗಸಮುದ್ರದ ಹಳ್ಳಿಗರು ಭಾವುಕರಾಗಿ ಮುಕ್ತಕಂಠದಿಂದ ಕೃತಜ್ಞತೆ ಸಲ್ಲಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/veterinary-doctors-rare-ruminotomy-surgery-saves-sacred-gods-buffalo-in-chitradurga-gdp/articleshow-vmgdw5e"/>
        </item>
        <item>
            <title><![CDATA[ಹಿರಿಯೂರು ಬೈಎಲೆಕ್ಷನ್‌: ದಳ ಜತೆ ಚರ್ಚೆಗೆ 3 ನಾಯಕರಿಗೆ ಬಿಜೆಪಿ ಹೊಣೆ; ಜಂಟಿ ಅಭ್ಯರ್ಥಿ?]]></title>
            <link>https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa</link>
            <guid isPermaLink="true">https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa</guid>
            <pubDate>Mon, 06 Jul 2026 05:22:38 +0530</pubDate>
            <description><![CDATA[ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಿತ್ರಪಕ್ಷ ಜೆಡಿಎಸ್ ಜೊತೆಗೂಡಿ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಸಿ.ಟಿ. ರವಿ ಅವರಿಗೆ ಬಿಜೆಪಿ ಜವಾಬ್ದಾರಿ ವಹಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jwn2b8e4stfxq94q8s69syzn,imgname-bjp-flag-pic-1748758798788.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಚಿತ್ರದುರ್ಗ ಜಿಲ್ಲೆಯಲ್ಲಿ ತೆರವಾದ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮಿತ್ರ ಪಕ್ಷ ಜೆಡಿಎಸ್&zwnj; ಜತೆ ಈ ಸಂಬಂಧ ಚರ್ಚೆ ನಡೆಸಲು ಮೂವರು ನಾಯಕರಿಗೆ ಜವಾಬ್ದಾರಿ ನೀಡಿದೆ.&lt;/p&gt;&lt;p&gt;ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್&zwnj;, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಭಾನುವಾರ ನಡೆದ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ.&lt;/p&gt;&lt;h2&gt;&lt;strong&gt;ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ&lt;/strong&gt;&lt;/h2&gt;&lt;p&gt;ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋರ್ ಕಮಿಟಿ ಸಭೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಬಗ್ಗೆ ಚರ್ಚೆ ಆಗಿದೆ. ಹಿರಿಯರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಸಿ.ಟಿ.ರವಿ ಅವರು ಜೆಡಿಎಸ್&zwnj;ನ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹಿರಿಯೂರು ಕ್ಷೇತ್ರ ಗೆಲ್ಲಲು ಕಾರ್ಯತಂತ್ರ ರೂಪಿಸಲು ಜವಾಬ್ದಾರಿ ನೀಡಿದ್ದೇವೆ ಎಂದು ತಿಳಿಸಿದರು.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bjp-preparing-for-hiriyur-assembly-constituency-by-election-mrq/articleshow-vxi4kqa"/>
        </item>
        <item>
            <title><![CDATA[Renukaswamy case: ತಾಯಿ ರತ್ನಪ್ರಭಾ ಪಾಟೀಸವಾಲಿಗೆ ಅನುಮತಿ ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್!]]></title>
            <link>https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</link>
            <guid isPermaLink="true">https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby</guid>
            <pubDate>Wed, 24 Jun 2026 13:12:54 +0530</pubDate>
            <description><![CDATA[ನಟ ದರ್ಶನ್ ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ರೇಣುಕಾಸ್ವಾಮಿ ತಾಯಿಯನ್ನು ಪಾಟೀಸವಾಲು ಮಾಡಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದೆ. ದರ್ಶನ್ ಪರ ವಕೀಲರ ಮನವಿ ಮೇರೆಗೆ, ನ್ಯಾಯಾಲಯವು ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvw8zwc879afmx90k1vpec6f,imgname-renukaswamy-case-1782286643592.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಜೂ.24): ಸ್ಯಾಂ&lt;/strong&gt;ಡಲ್&zwnj;ವುಡ್ ನಟ ದರ್ಶನ್ ಮತ್ತು ಗ್ಯಾಂಗ್&zwnj;ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾನೂನು ಹೋರಾಟ ತೀವ್ರಗೊಂಡಿದೆ. ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು ಪಾಟೀಸವಾಲು (Cross-examination) ನಡೆಸಲು ಅನುಮತಿ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ.&lt;/p&gt;&lt;h3&gt;&lt;strong&gt;ಏನಿದು ಪ್ರಕರಣ?&lt;/strong&gt;&lt;/h3&gt;&lt;p&gt;ಈ ಹಿಂದೆ ಜನವರಿ ತಿಂಗಳಿನಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಪ್ರಾಸಿಕ್ಯೂಷನ್, ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು 'ಪ್ರತಿಕೂಲ ಸಾಕ್ಷಿ' (Hostile Witness) ಎಂದು ಪರಿಗಣಿಸಿ, ಅವರನ್ನು ಪಾಟೀಸವಾಲು ನಡೆಸಲು ಅನುಮತಿ ನೀಡುವಂತೆ ಕೋರಿತ್ತು. ಆದರೆ, ಪ್ರಾಸಿಕ್ಯೂಷನ್&zwnj;ನ ಈ ಮನವಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿತ್ತು. ಕೆಳಹಂತದ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್&zwnj;ಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.&lt;/p&gt;&lt;h2&gt;&lt;strong&gt;ಹೈಕೋರ್ಟ್&zwnj;ನಲ್ಲಿ ನಡೆದಿದ್ದೇನು?&lt;/strong&gt;&lt;/h2&gt;&lt;p&gt;ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್&zwnj;ನ ಏಕಸದಸ್ಯ ಪೀಠವು ಕೈಗೆತ್ತಿಕೊಂಡಿತು. ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಹಾಜರಾಗಿ, ವಾದ ಮಂಡಿಸಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಮನವಿ ಮಾಡಿದರು. ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.&lt;/p&gt;&lt;p&gt;ದರ್ಶನ್ ಮತ್ತು ತಂಡದ ವಿರುದ್ಧದ ಈ ಕೊಲೆ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಸಾಕ್ಷಿಗಳ ವಿಚಾರಣೆ ಮತ್ತು ಪಾಟೀಸವಾಲು ಪ್ರಕ್ರಿಯೆಗಳು ಅತ್ಯಂತ ನಿರ್ಣಾಯಕವಾಗಿವೆ. ರತ್ನಪ್ರಭಾ ಅವರ ಸಾಕ್ಷ್ಯವು ಈ ಪ್ರಕರಣದಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗ ಹೈಕೋರ್ಟ್ ಜುಲೈ 2 ರಂದು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/renukaswamy-case-high-court-adjourns-prosecution-plea-ratnaprabha-cross-examination/articleshow-whhgyby"/>
        </item>
        <item>
            <title><![CDATA[ರೇಣುಕಾಸ್ವಾಮಿ ಕೇಸ್ ಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ಪ್ರದೋಶ್ ಮಾಫಿ ಸಾಕ್ಷಿಯಾದರೆ ದರ್ಶನ್‌ಗೆ ಲಾಭ! ಇದು ಫ್ಲ್ಯಾನ್?]]></title>
            <link>https://kannada.asianetnews.com/state/renukaswamy-case-twist-will-pradosh-turning-approver-actually-benefit-actor-darshan-snehamayi-krishna-facebook-post/articleshow-x507k0t</link>
            <guid isPermaLink="true">https://kannada.asianetnews.com/state/renukaswamy-case-twist-will-pradosh-turning-approver-actually-benefit-actor-darshan-snehamayi-krishna-facebook-post/articleshow-x507k0t</guid>
            <pubDate>Thu, 06 Aug 2026 15:48:49 +0530</pubDate>
            <description><![CDATA[ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಈ ಬೆಳವಣಿಗೆಯು ದರ್ಶನ್&zwnj;ಗೆ ಸಂಕಷ್ಟ ತರುವುದಿಲ್ಲ, ಬದಲಾಗಿ ಲಂಚ ಪಡೆದು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಅಧಿಕಾರಿಗಳನ್ನು ಬಲೆಗೆ ಬೀಳಿಸಲಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಸ್ನೇಹಮಯಿ ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzb8rdh2m4pdvtwhkznkmgan,imgname-vinay-pradosh-darshan-renukaswamy-case-1786010940961.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ಕಂಡುಬರುತ್ತಿದ್ದು, ಪ್ರಕರಣದ 14ನೇ ಆರೋಪಿ (A-14) ಪ್ರದೋಷ್ ತಾನು &lsquo;ಮಾಫಿ ಸಾಕ್ಷಿ&rsquo; (ಅಪ್ರೂವರ್) ಆಗಲು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಭಾರಿ ಸಂಚಲನ ಮೂಡಿಸಿದೆ. ಪ್ರದೋಶ್ ಮಾಫಿ ಸಾಕ್ಷಿಯಾದರೆ ನಟ ದರ್ಶನ್&zwnj;ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಲಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುವ ಬೆನ್ನಲ್ಲೇ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಹಂಚಿಕೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಈ ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದೆ. ಪ್ರದೋಶ್ ಮಾಫಿ ಸಾಕ್ಷಿಯಾಗುವುದರಿಂದ ನಟ ದರ್ಶನ್&zwnj;ಗೆ ಯಾವುದೇ ತೊಂದರೆಯಾಗುವುದಿಲ್ಲ, ಬದಲಿಗೆ ಅನುಕೂಲವೇ ಆಗಲಿದೆ ಎಂದು ಸ್ನೇಹಮಯಿ ಕೃಷ್ಣ ಬರೆದುಕೊಂಡಿದ್ದಾರೆ&lt;/p&gt;&lt;h2&gt;ಸ್ನೇಹಮಯಿ ಕೃಷ್ಣ ಅವರ ಪೋಸ್ಟ್&zwnj;ನಲ್ಲಿ ಏನಿದೆ?&lt;/h2&gt;&lt;p&gt;&quot;ರೇಣುಕಾಸ್ವಾಮಿ ಹತ್ಯೆಯ ನಂತರ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದು ಬಿಸಾಡಲು, ಬೇರೆಯವರನ್ನು ಆರೋಪಿಗಳನ್ನಾಗಿ ಮಾಡಿ ಪ್ರಕರಣವನ್ನು ಸಂಪೂರ್ಣವಾಗಿ ಮುಚ್ಚಿಹಾಕಲು ಇದೇ ಪ್ರದೋಶ್ ನೊಂದಿಗೆ ಶಾಮೀಲಾಗಿ ಸಂಚು ರೂಪಿಸಲಾಗಿತ್ತು. ಈ ಸಂಚಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕ (PSI) ವಿನಯ್ ಹಾಗೂ ಪೊಲೀಸ್ ನಿರೀಕ್ಷಕ (PI) ಗಿರೀಶ್ ನಾಯಕ್ ಸಹಕರಿಸಿದ್ದರು. ಇದಕ್ಕಾಗಿ ಪ್ರದೋಶ್&zwnj;ನಿಂದ ಪಿಎಸ್&zwnj;ಐ ವಿನಯ್ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಉಪ ಪೊಲೀಸ್ ನಿರೀಕ್ಷಕ ತಲೆಮರೆಸಿಕೊಂಡಿದ್ದರು&quot; ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.&lt;/p&gt;&lt;h2&gt;ಪೊಲೀಸ್ ಅಧಿಕಾರಿಗಳ ರಕ್ಷಣೆಗೆ ಸುಳ್ಳು ದೋಷಾರೋಪಣ ಪತ್ರ?&lt;/h2&gt;&lt;p&gt;ತಮ್ಮ ಪೋಸ್ಟ್&zwnj;ನಲ್ಲಿ ಮುಂದುವರಿದು ತನಿಖಾ ತಂಡದ ವಿರುದ್ಧವೇ ನೇರ ಆರೋಪ ಮಾಡಿರುವ ಅವರು, &quot;ಈ ಪೊಲೀಸ್ ಅಧಿಕಾರಿಗಳನ್ನು ಪ್ರಕರಣದ ಆರೋಪಿಗಳನ್ನಾಗಿ ಮಾಡದೆ, ಅವರನ್ನು ರಕ್ಷಿಸುವ ಸಲುವಾಗಿ ತನಿಖಾಧಿಕಾರಿಗಳು ಸತ್ಯಾಂಶಗಳನ್ನು ಮುಚ್ಚಿಟ್ಟಿದ್ದಾರೆ. ಪ್ರಕರಣದ ತನಿಖೆ ನಡೆಸಿದ್ದ ಸಹಾಯಕ ಪೊಲೀಸ್ ಆಯುಕ್ತ (ACP) ಚಂದನ್ ಕುಮಾರ್ ಅವರು ನ್ಯಾಯಾಲಯಕ್ಕೆ ಸುಳ್ಳು ದೋಷಾರೋಪಣ ಪತ್ರವನ್ನು (Charge Sheet) ಸಲ್ಲಿಸಿದ್ದಾರೆ. ಈಗ ಪ್ರದೋಶ್ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ನಿಜ ಹೇಳಿದರೆ, ಈ ಎಲ್ಲಾ ಸತ್ಯಗಳು ಹೊರಬರಲಿವೆ&quot; ಎಂದಿದ್ದಾರೆ.&lt;/p&gt;&lt;p&gt;ಪ್ರದೋಶ್ ನೀಡುವ ಮಾಫಿ ಸಾಕ್ಷಿ ಹೇಳಿಕೆಯಿಂದ ಇಡೀ ಪ್ರಕರಣವೇ ಹೊಸ ತಿರುವು ಪಡೆದುಕೊಳ್ಳಲಿದ್ದು, ಶವ ವಿಲೇವಾರಿಗೆ ಸಂಚು ರೂಪಿಸಿದ್ದ ಹಾಗೂ ಲಂಚ ಪಡೆದಿದ್ದ ಮೂವರು ಪೊಲೀಸ್ ಅಧಿಕಾರಿಗಳು ಪ್ರಕರಣದಲ್ಲಿ ಆರೋಪಿಗಳಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್&zwnj;ನಲ್ಲಿ ಉಲ್ಲೇಖಿಸಿದ್ದಾರೆ. ಮಾಫಿ ಸಾಕ್ಷಿಯಾಗಲು ಪ್ರದೋಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೋರ್ಟ್&zwnj;ನಲ್ಲಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಈ ಅರ್ಜಿಯ ಕುರಿತು ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ ಹಾಗೂ ತನಿಖಾ ಸಂಸ್ಥೆ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/renukaswamy-case-twist-will-pradosh-turning-approver-actually-benefit-actor-darshan-snehamayi-krishna-facebook-post/articleshow-x507k0t"/>
        </item>
    </channel>
</rss>
