<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 24 Apr 2026 04:38:17 +0530</lastBuildDate>
        <atom:link href="https://kannada.asianetnews.com/rss/chitradurga" rel="self" type="application/rss+xml"/>
        <item>
            <title><![CDATA[ಪೊಲೀಸ್ ಸಿಬ್ಬಂದಿಗೆ ಬಂದೂಕು ಹೊರಿಸಿ ರಣಬಿಸಿಲಲ್ಲಿ ನಿಲ್ಲಿಸಿದ್ದ PSI ನೇತ್ರಾವತಿಗೆ, ಕೇವಲ ಎತ್ತಂಗಡಿ ಶಿಕ್ಷೆ!]]></title>
            <link>https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs</link>
            <guid isPermaLink="true">https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs</guid>
            <pubDate>Wed, 08 Apr 2026 21:52:17 +0530</pubDate>
            <description><![CDATA[&lt;p&gt;ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್ಐ ನೇತ್ರಾವತಿ, ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ 12 ಸಿಬ್ಬಂದಿಗಳಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರು. ಈ ಘಟನೆಯಿಂದಾಗಿ ಸಿಬ್ಬಂದಿ ಅಸ್ವಸ್ಥರಾಗಿದ್ದು, ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಪಿಎಸ್ಐ ನೇತ್ರಾವತಿ ಈಗ ವರ್ಗಾವಣೆ ಆಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knkxgcknj27d34qbq55brsme,imgname-chitradurga-police-news--1--1775563715189.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.08): ಕ&lt;/strong&gt;ರ್ತವ್ಯ ನಿರ್ಲಕ್ಷ್ಯದ ನೆಪವೊಡ್ಡಿ ತನ್ನದೇ ಸಹೋದ್ಯೋಗಿಗಳಿಗೆ ಶಾಲಾ ಮಕ್ಕಳಂತೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ ಪಿಎಸ್ಐ ನೇತ್ರಾವತಿ ವಿರುದ್ಧ ಕೊನೆಗೂ ಶಿಸ್ತು ಕ್ರಮ ಜರುಗಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ನೇತ್ರಾವತಿ ಅವರನ್ನು ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಬಂಡಾರು ಆದೇಶ ಹೊರಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಏನಿದು &lsquo;ಬಿಸಿಲು ಶಿಕ್ಷೆ&rsquo; ಘಟನೆ?:&lt;/strong&gt;&lt;/h3&gt;&lt;p&gt;ಕೆಲವು ದಿನಗಳ ಹಿಂದೆ ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ನೇತ್ರಾವತಿ ಅವರು ತಮ್ಮ ಠಾಣೆಯ ಸಿಬ್ಬಂದಿಗಳ ಮೇಲೆ ದರ್ಪ ತೋರಿದ್ದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಕಾರಣ ನೀಡಿ, ಒಬ್ಬ ಎಎಸ್ಐ (ASI) ಸೇರಿದಂತೆ ಒಟ್ಟು 12 ಜನ ಪೊಲೀಸ್ ಸಿಬ್ಬಂದಿಗೆ ಕಠಿಣ ಶಿಕ್ಷೆ ವಿಧಿಸಿದ್ದರು. ಅದು ಸಣ್ಣಪುಟ್ಟ ಶಿಕ್ಷೆಯಾಗಿರಲಿಲ್ಲ; ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಸುಡುವ ರಣಬಿಸಿಲಿನಲ್ಲಿ ಬಂದೂಕು ಹಿಡಿದು ನಿಲ್ಲುವಂತೆ ಆದೇಶಿಸಿದ್ದರು.&lt;/p&gt;&lt;p&gt;&lt;/p&gt;&lt;h3&gt;&lt;strong&gt;ಆಸ್ಪತ್ರೆ ಪಾಲಾಗಿದ್ದ ಸಿಬ್ಬಂದಿ:&lt;/strong&gt;&lt;/h3&gt;&lt;p&gt;ಏಪ್ರಿಲ್ ತಿಂಗಳ ಅತೀವ ಬಿಸಿಲಿನಲ್ಲಿ ಸತತ ಮೂರು ಗಂಟೆಗಳ ಕಾಲ ಭಾರವಾದ ಬಂದೂಕು ಹೊತ್ತು ನಿಂತಿದ್ದರಿಂದ ಹಲವು ಸಿಬ್ಬಂದಿಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಿಸಿಲ ಧಗೆ ತಾಳಲಾರದೆ ಸುಸ್ತಾಗಿದ್ದ ಕೆಲವು ಪೊಲೀಸರು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಿಂದ ಮನನೊಂದ ಸಿಬ್ಬಂದಿಗಳು ಪಿಎಸ್ಐ ನೇತ್ರಾವತಿ ಅವರ ವರ್ತನೆಯ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಇಲಾಖೆಯ ಒಳಗಿನ ಶಿಸ್ತಿನ ಹೆಸರಿನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.&lt;/p&gt;&lt;h2&gt;&lt;strong&gt;ಎಸ್ಪಿ ಕಟ್ಟುನಿಟ್ಟಿನ ಕ್ರಮ:&lt;/strong&gt;&lt;/h2&gt;&lt;p&gt;ಘಟನೆಯ ಗಾಂಭೀರ್ಯವನ್ನು ಅರಿತ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ತಕ್ಷಣವೇ ತನಿಖೆಗೆ ಆದೇಶಿಸಿದ್ದರು. ಡಿವೈಎಸ್ಪಿ ಅರುಣ್ ಗೌಡ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ವರದಿ ನೀಡುವಂತೆ ಸೂಚಿಸಿದ್ದರು. ಡಿವೈಎಸ್ಪಿ ಅವರು ನೀಡಿದ ಪ್ರಾಥಮಿಕ ತನಿಖಾ ವರದಿಯಲ್ಲಿ ಪಿಎಸ್ಐ ನೇತ್ರಾವತಿ ಅವರು ಸಿಬ್ಬಂದಿಗಳಿಗೆ ಶಿಕ್ಷೆ ನೀಡಿರುವುದು ಮತ್ತು ದರ್ಪ ತೋರಿರುವುದು ದೃಢಪಟ್ಟಿದೆ.&lt;/p&gt;&lt;h3&gt;&lt;strong&gt;ಕಂಟ್ರೋಲ್ ರೂಂಗೆ ವರ್ಗಾವಣೆ:&lt;/strong&gt;&lt;/h3&gt;&lt;p&gt;ತನಿಖಾ ವರದಿ ಕೈ ಸೇರಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಪಿಎಸ್ಐ ನೇತ್ರಾವತಿ ಅವರನ್ನು ಚಿಕ್ಕಜಾಜೂರು ಠಾಣೆಯಿಂದ ಚಿತ್ರದುರ್ಗದ ಪೊಲೀಸ್ ನಿಯಂತ್ರಣ ಕೊಠಡಿಗೆ (Control Room) ವರ್ಗಾವಣೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮುಖ್ಯವಾದರೂ, ಅಮಾನವೀಯವಾಗಿ ಶಿಕ್ಷೆ ನೀಡುವುದು ತಪ್ಪು ಎಂಬ ಸಂದೇಶವನ್ನು ಈ ಕ್ರಮದ ಮೂಲಕ ರವಾನಿಸಲಾಗಿದೆ. ಸದ್ಯ ಈ ಘಟನೆ ಇಡೀ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/chitradurga-psi-netravati-transferred-punishing-police-staff-in-sunlight-chikkajajuru-sat/articleshow-1n4g9cs"/>
        </item>
        <item>
            <title><![CDATA[Pocso:  ಶಾಲೆ ಕೊಣೆಯೊಳಗೆ ಗಣಿತ ಶಿಕ್ಷಕನ ಕಾಮದಾಟ, ಕೇಸ್ ಮುಚ್ಚಿಹಾಕಲು ವಿದ್ಯಾರ್ಥಿನಿಗೆ ಗರ್ಭಪಾತ!]]></title>
            <link>https://kannada.asianetnews.com/karnataka-districts/pocso-case-registered-minor-student-pregnant-by-a-teacher-challakere-chitradurga-district-rav/articleshow-4ari6qh</link>
            <guid isPermaLink="true">https://kannada.asianetnews.com/karnataka-districts/pocso-case-registered-minor-student-pregnant-by-a-teacher-challakere-chitradurga-district-rav/articleshow-4ari6qh</guid>
            <pubDate>Fri, 10 Apr 2026 12:12:22 +0530</pubDate>
            <description><![CDATA[ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ, ಗಣಿತ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದ್ದಾನೆ. ನಂತರ, ವೈದ್ಯರೊಬ್ಬರ ಸಹಾಯದಿಂದ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದು, ಇದೀಗ ಶಿಕ್ಷಕ ಮತ್ತು ವೈದ್ಯರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knv20zfc05mknh8rsmdgsmft,imgname-----------------------2026-04-10t121146.049-1775803334124.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.10)&lt;/strong&gt;: ಇತ್ತೀಚಿನ ದಿನಗಳಲ್ಲಿ ಶಿಕ್ಷಕರಿಂದಲೇ &amp;nbsp;ಬಾಲಕಿಯರ ಮೇಲೆ ಬಲತ್ಕಾರಕ್ಕೆ ಯತ್ನಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಪೋಷಕರು ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಆತಂಕ ಪಡುವಂತಾಗಿದೆ. ಅದಕ್ಕೆ ಇಂಬು ಕೊಡುವಂತೆ ಚಿತ್ರದುರ್ಗದಲ್ಲಿ ಮತ್ತೊಂದು ಪೋಕ್ಸೊ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.&lt;/p&gt;&lt;h2&gt;ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿ&lt;/h2&gt;&lt;p&gt;ವಿದ್ಯೆ ಕಲಿಸಬೇಕಾದ ಗುರುವೇ ಕಾಮಪಿಶಾಚಿಯಾದ ಘನಘೋರ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬೆಳಕಿಗೆ ಬಂದಿದೆ. 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಪುಸಲಾಯಿಸಿ ಅದೇ ಶಾಲೆಯ ಶಿಕ್ಷಕನೊಬ್ಬ ಬಲತ್ಕಾರ ಎಸಗಿದ್ದು ಇದರ ಪರಿಣಾಮ ವಿದ್ಯಾರ್ಥಿನಿ ಗರ್ಭವತಿಯಾಗಿದ್ದಾಳೆ ಪ್ರಕರಣ ಈಗ ಪೊಲೀಸ್ ಮೆಟ್ಟಿಲೇರಿದೆ.&lt;/p&gt;&lt;h3&gt;ವಿದ್ಯಾರ್ಥಿನಿಯೊಂದಿಗೆ ಗಣಿತ ಶಿಕ್ಷಕನ ಕಾಮದಾಟ&lt;/h3&gt;&lt;p&gt;ಚಳ್ಳಕೆರೆ ವ್ಯಾಪ್ತಿಯಲ್ಲಿ ಬರುವ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ಹೆಚ್.ಓ. ರಾಜಣ್ಣ ಎಂಬಾತನೇ ಈ ಕೃತ್ಯವೆಸಗಿದ ಆರೋಪಿ. ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಬಾಲಕಿ ಗರ್ಭ ಧರಿಸಿದ್ದಳು ಎನ್ನಲಾಗಿದೆ. ಪೋಷಕರಿಗೆ ತಿಳಿದರೆ ಸಮಸ್ಯೆ ಎಂದರಿತು ಆರೋಪಿ ಶಿಕ್ಷಕ ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ.&lt;/p&gt;&lt;p&gt;ಬಾಲಕಿ ಗರ್ಭಿಣಿಯಾದ ವಿಷಯ ತಿಳಿಯುತ್ತಿದ್ದಂತೆಯೇ ವಿಷಯ ಮುಚ್ಚಿಹಾಕಲು ಆರೋಪಿ ಶಿಕ್ಷಕ ಯತ್ನಿಸಿದ್ದಾನೆ. ಮೊದಲೇ ಪ್ಲಾನ್ ಮಾಡಿಕೊಂಡಂತೆ ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಹೋಮ್&zwnj;ನ ವೈದ್ಯೆ ಶಂಕರಲಕ್ಷ್ಮೀ ಎಂಬುವವರ ಬಳಿ ಈ ವಿಷಯ ಮಾತಾಡಿ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.&lt;/p&gt;&lt;p&gt;&lt;strong&gt;ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು&lt;/strong&gt;&lt;/p&gt;&lt;p&gt;ವಿಷಯ ತಿಳಿದ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ನೀಡಿದ ದೂರಿನನ್ವಯ ಚಳ್ಳಕೆರೆ ತಳಕು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ . ದೂರಿನ ಅನ್ವಯ ಕಾಮುಕ ಶಿಕ್ಷಕ ರಾಜಣ್ಣ ಹಾಗೂ ಸಹಕರಿಸಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.&lt;/p&gt;&lt;p&gt;&lt;strong&gt;ಪೋಷಕರಲ್ಲಿ ಹೆಚ್ಚಿದ ಆತಂಕ&lt;/strong&gt;&lt;/p&gt;&lt;p&gt;ಗುರುಗಳಂತೆ ಕಾಣುವ ಇಂಥ ಶಿಕ್ಷಕರೇ ಶಿಶುಕಾಮುಕರಾಗಿ ಬದಲಾಗುತ್ತಿರುವುದು ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಶಾಲೆಗೆ ಹೋದರೆ ಮಕ್ಕಳು ಸುರಕ್ಷಿತ ಎಂಬ ಪೋಷಕರ ನಂಬಿಕೆಗೆ ಈ ಘಟನೆ ದೊಡ್ಡ ಪೆಟ್ಟು ನೀಡಿದ್ದು, ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/pocso-case-registered-minor-student-pregnant-by-a-teacher-challakere-chitradurga-district-rav/articleshow-4ari6qh"/>
        </item>
        <item>
            <title><![CDATA[ಭೀಕರ ಅಪಘಾತದಲ್ಲಿ ಮೂವರು ಇನ್ಸ್‌ಪೆಕ್ಟರ್ ಬಲಿಪಡೆದ ಸ್ಥಳಕ್ಕೆ ಗೃಹ ಸಚಿವರ ಭೇಟಿ; ಭರಪೂರ ಪರಿಹಾರಕ್ಕೆ ಕಾನೂನಿನ ತೊಡಕು?]]></title>
            <link>https://kannada.asianetnews.com/gallery/state/home-minister-parameshwar-visits-three-inspectors-spot-dead-chitradurga-accident-place-promises-aid-sat-4efdrxt</link>
            <guid isPermaLink="true">https://kannada.asianetnews.com/gallery/state/home-minister-parameshwar-visits-three-inspectors-spot-dead-chitradurga-accident-place-promises-aid-sat-4efdrxt</guid>
            <pubDate>Sun, 15 Mar 2026 13:52:55 +0530</pubDate>
            <description><![CDATA[&lt;p&gt;ಚಿತ್ರದುರ್ಗದ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, &amp;nbsp;ಇನ್ಸ್&zwnj;ಪೆಕ್ಟರ್&zwnj;ಗಳು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮೃತರು ರಜೆಯಲ್ಲಿದ್ದ ಕಾರಣ ಪರಿಹಾರ ನೀಡಲು ಇರುವ ಕಾನೂನು ತೊಡಕುಗಳ ಬಗ್ಗೆ ಪರಿಶೀಲಿಸಿ ನೆರವು ನಿಡುವುದಾಗಿ ಭರವಸೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkr8yqfe3h5hn0p2snyzb3yb,imgname-chitradurga-accident--3---1--1773562453486.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗದ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, &amp;nbsp;ಇನ್ಸ್&zwnj;ಪೆಕ್ಟರ್&zwnj;ಗಳು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮೃತರು ರಜೆಯಲ್ಲಿದ್ದ ಕಾರಣ ಪರಿಹಾರ ನೀಡಲು ಇರುವ ಕಾನೂನು ತೊಡಕುಗಳ ಬಗ್ಗೆ ಪರಿಶೀಲಿಸಿ ನೆರವು ನಿಡುವುದಾಗಿ ಭರವಸೆ ನೀಡಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಚಿತ್ರದುರ್ಗ (ಮಾ.15): ಚಿ&lt;/strong&gt;ತ್ರದುರ್ಗದ ಹೆಗ್ಗೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಆರ್&zwnj;ಎಸ್&zwnj;ಐ ಸಾವನ್ನಪ್ಪಿದ್ದಾರೆ. ಇವರು ಮೂವರೂ ಯುವಕರು, ಇತ್ತೀಚಿಗಷ್ಟೇ ಕೆಲಸಕ್ಕೆ ನೇಮಕವಾಗಿದ್ದರು. ಇದೀಗ ಮದುವೆಗೆ ಬಳ್ಳಾರಿಗೆ ಹೊರಟಾಗ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇವರು ರಜೆಯ ಮೇಲಿದ್ದ ಕಾರಣ, ಮೃತರ ಕುಟುಂಬಕ್ಕೆ ಯಾವ ರೀತಿಯ ಪರಿಹಾರ ನೀಡಬೇಕಾಗುತ್ತದೆ ಎಂಬುದನ್ನು ಪರಿಶೀಲಿಸಿ ನರವು ನೋಡುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಇಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟ ಮೂವರು ಯುವ ರಿಸರ್ವ್ ಸಬ್ ಇನ್&zwnj;ಸ್ಪೆಕ್ಟರ್&zwnj;ಗಳ (RSI) ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ನೆರವು ನೀಡುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.&amp;nbsp;&lt;/p&gt;&lt;p&gt;ದುರಂತ ಸಂಭವಿಸಿದ ಹೆಗ್ಗೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಭೇಟಿ ನೀಡಿದ ಗೃಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಐಜಿಪಿ ಲಾಭೂರಾಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಅವರು ಘಟನೆಯ ವಿವರಗಳನ್ನು ನೀಡಿದರು. ಕಾರು ಲಾರಿಗೆ ಡಿಕ್ಕಿ ಹೊಡೆದ ಭೀಕರತೆಯನ್ನು ಕಂಡು ಸಚಿವರು ವಿಷಾದ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;ಅಪಘಾತದಲ್ಲಿ ಮೃತಪಟ್ಟ ಮಂಜುನಾಥ್ (31), ಅಮರೇಶ್ (25) ಮತ್ತು ಸಚಿನ್ (32) ಅವರು ಇತ್ತೀಚೆಗಷ್ಟೇ ಪೊಲೀಸ್ ಇಲಾಖೆಗೆ ನೇಮಕಗೊಂಡು ಸೇವೆಯಲ್ಲಿದ್ದರು. ಗೆಳೆಯನ ಮದುವೆ ಸಮಾರಂಭಕ್ಕಾಗಿ ರಜೆ ಪಡೆದು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 'ಮದುವೆಯ ಸಂಭ್ರಮಕ್ಕೆ ಹೋಗುತ್ತಿದ್ದ ಯುವ ಅಧಿಕಾರಿಗಳು ಹೀಗೆ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ' ಎಂದು ಪರಮೇಶ್ವರ್ ತಿಳಿಸಿದರು.&lt;/p&gt;&lt;img&gt;&lt;p&gt;ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, 'ಅಪಘಾತ ನಡೆದಾಗ ಅಧಿಕಾರಿಗಳು ರಜೆಯಲ್ಲಿದ್ದರು. ಸಾಮಾನ್ಯವಾಗಿ ಇಲಾಖೆಯ ನಿಯಮಗಳ ಪ್ರಕಾರ ಕರ್ತವ್ಯದ ಅವಧಿಯಲ್ಲಿ ಮೃತಪಟ್ಟರೆ ಸಿಗುವ ಸೌಲಭ್ಯಗಳು ಬೇರೆ ಇರುತ್ತವೆ. ಆದರೆ, ಮೃತಪಟ್ಟವರು ನಮ್ಮ ಇಲಾಖೆಯ ಯುವ ಅಧಿಕಾರಿಗಳಾದ ಕಾರಣ, ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಯಾವ ರೀತಿ ಗರಿಷ್ಠ ನೆರವು ನೀಡಬಹುದು ಎಂಬುದನ್ನು ಪರಿಶೀಲಿಸುತ್ತೇವೆ. ನಿಯಮಾನುಸಾರ ಮೃತರ ಕುಟುಂಬಕ್ಕೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ.&lt;/p&gt;&lt;img&gt;&lt;p&gt;ಇನ್ನು 'ಹೆದ್ದಾರಿಯಲ್ಲಿ ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಈ ಸಮಯದಲ್ಲಿ ಯಾರದ್ದು ತಪ್ಪು ಎಂದು ಹೇಳುವುದು ಕಷ್ಟಸಾಧ್ಯ. ಆದರೆ ಘಟನೆ ಮಾತ್ರ ತುಂಬ ದೊಡ್ಡ ನಷ್ಟವನ್ನುಂಟು ಮಾಡಿದೆ' ಎಂದು ಗೃಹ ಸಚಿವ ಪರಮೇಶ್ವರ ಬೇಸರ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;ಇದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿಎಸ್ಐ ಈಶ್ವರ್ ಮತ್ತು ಆರ್&zwnj;ಎಸ್&zwnj;ಐ ಮಹಾಂತೇಶ್ ಅವರ ಆರೋಗ್ಯದ ಬಗ್ಗೆಯೂ ಸಚಿವರು ಮಾಹಿತಿ ಪಡೆದರು. ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ಪ್ರಾರ್ಥಿಸಿದರು.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/home-minister-parameshwar-visits-three-inspectors-spot-dead-chitradurga-accident-place-promises-aid-sat-4efdrxt"/>
        </item>
        <item>
            <title><![CDATA[ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಯುವ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಸಿಎಂ ಘೋಷಣೆ]]></title>
            <link>https://kannada.asianetnews.com/karnataka-districts/challakere-heggere-accident-update-three-inspectors-death-govt-announce-compensation-sat/articleshow-5248z6n</link>
            <guid isPermaLink="true">https://kannada.asianetnews.com/karnataka-districts/challakere-heggere-accident-update-three-inspectors-death-govt-announce-compensation-sat/articleshow-5248z6n</guid>
            <pubDate>Wed, 18 Mar 2026 17:06:03 +0530</pubDate>
            <description><![CDATA[&lt;p&gt;ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್ ಇನ್ಸ್&zwnj;ಪೆಕ್ಟರ್&zwnj;ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆಗೆ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km0bkdx85zmp9q2ma2ee5c0p,imgname-chitradurga-inspectors-death-accident-1773833664424.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮಾ.18): ಜಿ&lt;/strong&gt;ಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕರ್ತವ್ಯದ ನಡುವೆಯೇ ಸ್ನೇಹಿತನ ಮದುವೆಗೆ ಒಂದು ದಿನ ರಜೆ ಹಾಕಿ ಹೋಗುವಾಗ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡ ಮೂವರು ರಿಸರ್ವ್ ಸಬ್ ಇನ್ಸ್&zwnj;ಪೆಕ್ಟರ್&zwnj;ಗಳ (RSI) ಕುಟುಂಬಕ್ಕೆ ರಾಜ್ಯ ಸರ್ಕಾರ ಈಗ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಭಾನುವಾರ ಬೆಳಗ್ಗೆ ಚಿತ್ರದುರ್ಗದ ಚಳ್ಳಕೆರೆ ಮಾರ್ಗವಾಗಿ ಚಲಿಸುತ್ತಿದ್ದ ಪೊಲೀಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಪೊಲೀಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ಆರ್&zwnj;ಎಸ್&zwnj;ಐಗಳು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಮೃತಪಟ್ಟ ಮಂಜುನಾಥ್ (31), ಅಮರೇಶ್ (25) ಮತ್ತು ಸಚಿನ್ (32) ಅವರು ಇತ್ತೀಚೆಗಷ್ಟೇ ಪೊಲೀಸ್ ಇಲಾಖೆಗೆ ನೇಮಕಗೊಂಡು ಸೇವೆಯಲ್ಲಿದ್ದರು. ಗೆಳೆಯನ ಮದುವೆ ಸಮಾರಂಭಕ್ಕಾಗಿ ರಜೆ ಪಡೆದು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 'ಮದುವೆಯ ಸಂಭ್ರಮಕ್ಕೆ ಹೋಗುತ್ತಿದ್ದ ಯುವ ಅಧಿಕಾರಿಗಳು ಹೀಗೆ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ' ಎಂದು ಪರಮೇಶ್ವರ್ ತಿಳಿಸಿದ್ದರು.&lt;/p&gt;&lt;p&gt;ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್&zwnj;ಪೆಕ್ಟರ್&zwnj;ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು.ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ&hellip;&lt;/p&gt;&lt;p&gt;&mdash; Siddaramaiah (@siddaramaiah) March 18, 2026&lt;/p&gt;&lt;p&gt;&amp;nbsp;&lt;/p&gt;&lt;h2&gt;&lt;strong&gt;ಸರ್ಕಾರದ ಪರಿಹಾರ ಮತ್ತು ಸಾಂತ್ವನ:&lt;/strong&gt;&lt;/h2&gt;&lt;p&gt;ಈ ದುರದೃಷ್ಟಕರ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸರ್ಕಾರ, 'ಇದು ಅತ್ಯಂತ ದುರದೃಷ್ಟಕರ ಘಟನೆ. ನಾಡಿನ ಸೇವೆಗೆ ಮುಡಿಪಾಗಿದ್ದ ಅಧಿಕಾರಿಗಳನ್ನು ಕಳೆದುಕೊಂಡಿರುವುದು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ' ಎಂದು ಪ್ರಾರ್ಥಿಸಿದೆ. ಮೃತ ಅಧಿಕಾರಿಗಳ ಕುಟುಂಬದ ಆಧಾರಸ್ತಂಭಗಳು ಕುಸಿದಿರುವ ಹಿನ್ನೆಲೆಯಲ್ಲಿ, ತಕ್ಷಣದ ನೆರವಾಗಿ ತಲಾ 5 ಲಕ್ಷ ರೂಪಾಯಿ ಘೋಷಿಸಲಾಗಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಪೊಲೀಸರಿಗೆ ತಲಾ 2 ಲಕ್ಷ ರೂಪಾಯಿ ಚಿಕಿತ್ಸಾ ವೆಚ್ಚ ಮತ್ತು ಪರಿಹಾರ ನೀಡಲು ಆದೇಶಿಸಲಾಗಿದೆ.&lt;/p&gt;&lt;h2&gt;&lt;strong&gt;ಹೆಗ್ಗೆರೆ ಗೇಟ್ ಬಳಿ ಹೆಚ್ಚುತ್ತಿರುವ ರಕ್ತಪಾತ:&lt;/strong&gt;&lt;/h2&gt;&lt;p&gt;ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಈ ಹಿಂದೆಯೂ ಹಲವು ಭೀಕರ ಅಪಘಾತಗಳು ಸಂಭವಿಸಿವೆ. ಈ ರಸ್ತೆಯಲ್ಲಿ ವಾಹನಗಳ ವೇಗ ಮತ್ತು ಅವೈಜ್ಞಾನಿಕ ತಿರುವುಗಳು ಸಾವಿನ ಬಲೆಗಳಾಗಿ ಪರಿಣಮಿಸಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಚಿತ್ರದುರ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಪೊಲೀಸ್ ಇಲಾಖೆಯ ಸಿಬ್ಬಂದಿ ಇರುವ ವಾಹನಗಳೇ ಈ ರೀತಿ ಅಪಘಾತಕ್ಕೀಡಾಗಿರುವುದು ಸುರಕ್ಷತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/challakere-heggere-accident-update-three-inspectors-death-govt-announce-compensation-sat/articleshow-5248z6n"/>
        </item>
        <item>
            <title><![CDATA[Chitradurga: ಅಧ್ಯಾಪಕನೊಂದಿಗೆ ಸಂಬಂಧ ಅಪಪ್ರಚಾರ; ನೇಣಿಗೆ ಶರಣಾದ BAMS ವಿದ್ಯಾರ್ಥಿನಿ ನಿಖಿತಾ]]></title>
            <link>https://kannada.asianetnews.com/gallery/karnataka-districts/chitradurga-holalkere-bams-student-nikita-hangs-herself-after-rumours-of-relationship-with-professor-spread-mrq-6abcyin</link>
            <guid isPermaLink="true">https://kannada.asianetnews.com/gallery/karnataka-districts/chitradurga-holalkere-bams-student-nikita-hangs-herself-after-rumours-of-relationship-with-professor-spread-mrq-6abcyin</guid>
            <pubDate>Thu, 02 Apr 2026 08:39:24 +0530</pubDate>
            <description><![CDATA[&lt;p&gt;ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್&zwnj;ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಅಧ್ಯಾಪಕ ಡಾ. ರಾಜು ಮತ್ತು ಕೆಲ ವಿದ್ಯಾರ್ಥಿನಿಯರು ಕಾರಣ ಎಂದು ಉಲ್ಲೇಖಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn629mvva9vv088b51pa1e7e,imgname-holalkere-bams-student-suicide--3--1775098975099.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್&zwnj;ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಅಧ್ಯಾಪಕ ಡಾ. ರಾಜು ಮತ್ತು ಕೆಲ ವಿದ್ಯಾರ್ಥಿನಿಯರು ಕಾರಣ ಎಂದು ಉಲ್ಲೇಖಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಬಿಎಎಂಎಸ್ ವಿದ್ಯಾರ್ಥಿನಿ 23 ವರ್ಷದ ನಿಖಿತಾ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್&zwnj;ನಲ್ಲಿರುವ ಮನೆಯಲ್ಲಿ ನಿಖಿತಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಮೃತ ನಿಖಿತಾ ಮಲ್ಲಾಡಿಹಳ್ಳಿಯ ಮೆಡಿಕಲ್ ಕಾಲೇಜಿನಲ್ಲಿ ಬಿಎಎಂಎಸ್ ಓದುತ್ತಿದ್ದರು. ಸಾವಿಗೂ ಮುನ್ನ ಡೆತ್&zwnj;ನೋಟ್ ಬರೆದಿಟ್ಟಿರುವ ನಿಖಿತಾ, ತನ್ನ ಸಾವಿಗೆ ಕಾರಣವಾಗಿರುವ ಕಾನೂನುಕ್ರಮ ಜರಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಡೆತ್&zwnj;ನೋಟ್&zwnj;ನಲ್ಲಿ ಅಧ್ಯಾಪಕ ಮತ್ತು ಕೆಲ ವಿದ್ಯಾರ್ಥಿನಿಯರ ಹೆಸರನ್ನು ನಿಖಿತಾ ಉಲ್ಲೇಖಿಸಿದ್ದಾರೆ.&lt;/p&gt;&lt;img&gt;&lt;p&gt;ಅಧ್ಯಾಪಕ ಡಾಕ್ಟರ್ ರಾಜು, ಪತ್ನಿ ನಿಶಾ ಮತ್ತು ಕೆಲ ವಿದ್ಯಾರ್ಥಿಗಳ ವಿರುದ್ಧ ಹೆಸರುಗಳನ್ನು ನಿಖಿತಾ ಡೆತ್&zwnj;ನೋಟ್&zwnj;ನಲ್ಲಿ ಬರೆದಿದ್ದಾರೆ. ಅಧ್ಯಾಪಕ ರಾಜು ಜೊತೆ ನಿಖಿತಾ ಅವರಿಗೆ ಸಂಬಂಧ ಕಲ್ಪಿಸಿ ಕೆಲವರು ಅಪಪ್ರಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಅಪಪ್ರಚಾರದಿಂದ ನೊಂದ ನಿಖಿತಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಡೆತ್&zwnj;ನೋಟ್ ವಶಕ್ಕೆ ಪಡೆದುಕೊಂಡಿದ್ದು, ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಧ್ಯಾಪಕ ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;img&gt;&lt;p&gt;ಎಂಬಿಬಿಎಸ್&zwnj; ವಿದ್ಯಾರ್ಥಿಯೊಬ್ಬ ಅಪಾರ್ಟ್&zwnj;ಮೆಂಟ್&zwnj;ನ 12ನೇ ಮಹಡಿಯಿಂದ ಹಾರಿ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಗರದ ಅತ್ತಾವರ ಸ್ಟರಕ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಮೃತರು. ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ 4ನೇ ವರ್ಷದ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ಸಾರ್ಥಕ್&zwnj; ಅವರು ಸೋಮವಾರ ಮಧ್ಯಾಹ್ನ ತನ್ನ ಗೆಳತಿ ಉಳಿದುಕೊಂಡಿದ್ದ ಅತ್ತಾವರದ ಅಪಾರ್ಟ್&zwnj;ಮೆಂಟ್&zwnj;ಗೆ ತೆರಳಿದ್ದರು.&amp;nbsp;&lt;/p&gt;&lt;p&gt;ಅಲ್ಲಿನ ಸೆಕ್ಯುರಿಟಿ ಕೌಂಟರ್&zwnj;ನಲ್ಲಿ ಗೆಳತಿಯ ಮನೆಗೆ ಹೋಗುವ ಬಗ್ಗೆ ಮಾಹಿತಿ ನಮೂದಿಸಿ, ಆಕೆ ಉಳಿದುಕೊಂಡಿದ್ದ 12ನೇ ಮಹಡಿ ಕಡೆಗೆ ತೆರಳಿದ್ದಾರೆ. ಆದರೆ ಆಕೆಯ ಮನೆಗೆ ಹೋಗುವ ಬದಲು ವಿರುದ್ಧ ದಿಕ್ಕಿಗೆ ತೆರಳಿ ಕೆಳಗೆ ಹಾರಿದ್ದಾರೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/chitradurga-holalkere-bams-student-nikita-hangs-herself-after-rumours-of-relationship-with-professor-spread-mrq-6abcyin"/>
        </item>
        <item>
            <title><![CDATA[ಚಿತ್ರದುರ್ಗ ಹಣ ಡಬ್ಲಿಂಗ್ ದಂಧೆ: ಪೊಲೀಸರಿಗೆ ದರ್ಪ ತೋರಿದ್ದ ಮಾಜಿ ಕಾರ್ಪೋರೇಟರ್ ಕೊನೆಗೂ ಜೈಲುಪಾಲು!]]></title>
            <link>https://kannada.asianetnews.com/karnataka-districts/chitradurga-cmc-former-member-chandrashekhar-arrested-in-money-doubling-scam-sat/articleshow-aylyec9</link>
            <guid isPermaLink="true">https://kannada.asianetnews.com/karnataka-districts/chitradurga-cmc-former-member-chandrashekhar-arrested-in-money-doubling-scam-sat/articleshow-aylyec9</guid>
            <pubDate>Sun, 15 Mar 2026 13:09:57 +0530</pubDate>
            <description><![CDATA[ಚಿತ್ರದುರ್ಗದ ಹಣ ಡಬ್ಲಿಂಗ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್&zwnj;ನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkr5czpjthb0r80hxt6525vy,imgname-chitradurga-ex-corporator-chandrashekhar-arrest-1773558726353.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮಾ.15): ಕೋ&lt;/strong&gt;ಟೆನಾಡು ಚಿತ್ರದುರ್ಗದಲ್ಲಿ ಸಂಚಲನ ಮೂಡಿಸಿದ್ದ ಹಣ ಡಬ್ಲಿಂಗ್ (Money Doubling Case) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್&zwnj;ನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ ಹಣದ ವಂಚನೆ ಮಾತ್ರವಲ್ಲದೆ, ತನಿಖೆಗೆ ಬಂದಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ದರ್ಪ ತೋರಿದ ಆರೋಪದ ಮೇಲೆ ಈತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.&lt;/p&gt;&lt;h2&gt;&lt;strong&gt;ಘಟನೆಯ ಹಿನ್ನೆಲೆ ಏನು?&lt;/strong&gt;&lt;/h2&gt;&lt;p&gt;ಚಿತ್ರದುರ್ಗ ನಗರದಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲವೊಂದರ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಜಾಲದಲ್ಲಿ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಪ್ರಮುಖ ಪಾತ್ರ ವಹಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 4 ರಂದು ಪೊಲೀಸರ ತಂಡ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿತ್ತು. ಆದರೆ, ಶೋಧ ಕಾರ್ಯದ ವೇಳೆ ಆರೋಪಿ ಚಂದ್ರಶೇಖರ್ ಪೊಲೀಸರೊಂದಿಗೆ ಉದ್ಧಟತನದಿಂದ ವರ್ತಿಸಿದ್ದಲ್ಲದೆ, ಅವರ ಕಾನೂನುಬದ್ಧ ಕೆಲಸಕ್ಕೆ ಅಡ್ಡಿಪಡಿಸಿದ್ದ. ಪೊಲೀಸರ ಕಣ್ಣು ತಪ್ಪಿಸಿ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ಈ ಸಂಬಂಧ ಚಂದ್ರಶೇಖರ್ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.&lt;/p&gt;&lt;h2&gt;&lt;strong&gt;ಜಾಲದ ಇತರ ಆರೋಪಿಗಳ ಪತ್ತೆ:&lt;/strong&gt;&lt;/h2&gt;&lt;p&gt;ಈ ಹಣ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮಂಗಳೂರು ಮೂಲದ ರೋಷನ್ ಸಲ್ದಾನ್ ಎಂಬಾತನನ್ನು ಬಂಧಿಸಿದ್ದರು. ರೋಷನ್ ಬಂಧನದ ವೇಳೆ ಚಂದ್ರಶೇಖರ್ ಮತ್ತು ಮತ್ತೋರ್ವ ಆರೋಪಿ ನಾಪತ್ತೆಯಾಗಿದ್ದರು. ಪೊಲೀಸರು ಈ ತಂಡದ ಜಾಡನ್ನು ಬೆನ್ನಟ್ಟಿ ತನಿಖೆ ತೀವ್ರಗೊಳಿಸಿದ್ದರು. ಚಂದ್ರಶೇಖರ್ ಬಂಧನಕ್ಕೆ ಹಲವು ದಿನಗಳಿಂದ ಬಲೆ ಬೀಸಿದ್ದ ಪೊಲೀಸರಿಗೆ ನಿನ್ನೆ ಯಶಸ್ಸು ಸಿಕ್ಕಿದೆ. ಚಿತ್ರದುರ್ಗ ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ನಾಪತ್ತೆಯಾಗಿದ್ದ ಚಂದ್ರಶೇಖರ್&zwnj;ನನ್ನು ಪತ್ತೆ ಹಚ್ಚಿ ಬಂಧಿಸಿರುವ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿದೆ.&lt;/p&gt;&lt;h2&gt;&lt;strong&gt;ಸಾರ್ವಜನಿಕರಲ್ಲಿ ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಇತ್ತೀಚಿನ ದಿನಗಳಲ್ಲಿ ಹಣವನ್ನು ಅತಿ ಕಡಿಮೆ ಸಮಯದಲ್ಲಿ ದುಪ್ಪಟ್ಟು ಮಾಡಿಕೊಡುತ್ತೇವೆ ಎನ್ನುವ ಆಮಿಷವೊಡ್ಡಿ ಜನರನ್ನು ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜಕೀಯ ಪ್ರಭಾವ ಹೊಂದಿರುವ ವ್ಯಕ್ತಿಗಳೇ ಇಂತಹ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ಸಾರ್ವಜನಿಕರು ಎಚ್ಚರದಿಂದಿರಬೇಕು ಮತ್ತು ಇಂತಹ ವಂಚಕರ ಮಾತುಗಳಿಗೆ ಮರುಳಾಗಬಾರದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ. ಸದ್ಯ ಚಂದ್ರಶೇಖರ್ ಬಂಧನದಿಂದ ಈ ಹಗರಣದ ಇನ್ನಷ್ಟು ಆಳ-ಅಗಲಗಳು ಹೊರಬರುವ ಸಾಧ್ಯತೆಯಿದೆ. ಪೊಲೀಸರು ಈತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ, ಈ ಜಾಲದಲ್ಲಿರುವ ಇತರ ಪ್ರಭಾವಿಗಳ ಪತ್ತೆಗೆ ಮುಂದಾಗಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chitradurga-cmc-former-member-chandrashekhar-arrested-in-money-doubling-scam-sat/articleshow-aylyec9"/>
        </item>
        <item>
            <title><![CDATA[ಚಿತ್ರದುರ್ಗ PSI ನೇತ್ರಾವತಿ ದರ್ಪ: ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ!]]></title>
            <link>https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92</link>
            <guid isPermaLink="true">https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92</guid>
            <pubDate>Tue, 07 Apr 2026 17:48:00 +0530</pubDate>
            <description><![CDATA[ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ, ಕರ್ತವ್ಯ ಲೋಪದ ಆರೋಪದ ಮೇಲೆ 12 ಸಿಬ್ಬಂದಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದಾರೆ. ಈ ಅಮಾನವೀಯ ಶಿಕ್ಷೆಯಿಂದಾಗಿ ಕೆಲ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knkxgcknj27d34qbq55brsme,imgname-chitradurga-police-news--1--1775563715189.jpg" type="image/jpeg" height="390" width="690"/>
            <content:encoded><![CDATA[ಚಿತ್ರದುರ್ಗದ ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ, ಕರ್ತವ್ಯ ಲೋಪದ ಆರೋಪದ ಮೇಲೆ 12 ಸಿಬ್ಬಂದಿಗೆ ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದಾರೆ. ಈ ಅಮಾನವೀಯ ಶಿಕ್ಷೆಯಿಂದಾಗಿ ಕೆಲ ಸಿಬ್ಬಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದಾರೆ.&lt;img&gt;&lt;p&gt;&lt;strong&gt;ಚಿತ್ರದುರ್ಗ (ಏ.07): ಶಿ&lt;/strong&gt;ಸ್ತಿನ ಇಲಾಖೆ ಎಂದೇ ಕರೆಯಲ್ಪಡುವ ಪೊಲೀಸ್ ಇಲಾಖೆಯಲ್ಲಿ ಮೇಲಾಧಿಕಾರಿಗಳು ಕೆಳಹಂತದ ಸಿಬ್ಬಂದಿಗೆ ಶಿಕ್ಷೆ ನೀಡುವುದು ಹೊಸದೇನಲ್ಲ. ಆದರೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪಿಎಸ್&zwnj;ಐ ನೇತ್ರಾವತಿ ಅವರು ತಮ್ಮದೇ ಸಿಬ್ಬಂದಿಗೆ ನೀಡಿರುವ ಶಿಕ್ಷೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಕರ್ತವ್ಯ ಲೋಪದ ಹೆಸರಿನಲ್ಲಿ ಬರೋಬ್ಬರಿ 12 ಮಂದಿ ಸಿಬ್ಬಂದಿಯನ್ನು ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಲಾಗಿದ್ದು, ಇಲಾಖೆಯ ಒಳಗಿನ ಶಿಸ್ತು ಮತ್ತು ಮಾನವೀಯತೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ.&lt;/p&gt;&lt;img&gt;&lt;p&gt;ಚಿಕ್ಕಜಾಜೂರು ಠಾಣೆಯ ಪಿಎಸ್&zwnj;ಐ ನೇತ್ರಾವತಿ ಅವರು ತಮ್ಮ ಠಾಣೆಯ ಎಎಸ್&zwnj;ಐ (ASI) ಸೇರಿದಂತೆ ಒಟ್ಟು 12 ಮಂದಿ ಸಿಬ್ಬಂದಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಅಂದರೆ ಸೂರ್ಯನ ಶಾಖ ಅತಿ ಹೆಚ್ಚಿರುವ ಸಮಯದಲ್ಲಿ, ಸಿಬ್ಬಂದಿಯನ್ನು ಠಾಣೆಯ ಹೊರಗೆ ನಿಲ್ಲಿಸಲಾಗಿದೆ. ಕೇವಲ ನಿಲ್ಲಿಸುವುದು ಮಾತ್ರವಲ್ಲದೆ, ಹೆಗಲ ಮೇಲೆ ಭಾರವಾದ ಬಂದೂಕುಗಳನ್ನು (Rifles) ಹೊತ್ತು ನಿಲ್ಲುವಂತೆ ಆದೇಶಿಸಿದ್ದರು. ಸುಮಾರು ಮೂರು ಗಂಟೆಗಳ ಕಾಲ ಅಗ್ನಿ ಉಗುಳುವ ಬಿಸಿಲಿನಲ್ಲಿ ಸಿಬ್ಬಂದಿ ಈ ಶಿಕ್ಷೆಯನ್ನು ಅನುಭವಿಸಿದ್ದಾರೆ.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಸ್ತುತ ತಾಪಮಾನ ಏರಿಕೆಯಾಗಿದ್ದು, ಜನಸಾಮಾನ್ಯರೇ ಹೊರಬರಲು ಭಯಪಡುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ 3 ಗಂಟೆಗಳ ಕಾಲ ಬಂದೂಕು ಹೊತ್ತು ಬಿಸಿಲಿನಲ್ಲಿ ನಿಂತ ಪರಿಣಾಮ, ಶಿಕ್ಷೆ ಅನುಭವಿಸಿದ ಸಿಬ್ಬಂದಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವರು ತೀವ್ರ ಸುಸ್ತಿನಿಂದ ಬಳಲಿದರೆ, ಇನ್ನು ಕೆಲವರಿಗೆ ತಲೆಸುತ್ತು ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಕೆಲ ಸಿಬ್ಬಂದಿಯನ್ನು ತಕ್ಷಣವೇ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆಯಿಂದ ಪೊಲೀಸ್ ಸಿಬ್ಬಂದಿ ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಪಿಎಸ್&zwnj;ಐ ಅವರ ಈ ನಡೆ 'ದರ್ಪ'ದ ಪರಮಾವಧಿ ಎಂದು ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದರೆ ಇಲಾಖಾ ತನಿಖೆ ನಡೆಸಿ ನೋಟಿಸ್ ನೀಡಬಹುದಿತ್ತು ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳಬಹುದಿತ್ತು. ಅದನ್ನು ಬಿಟ್ಟು ಇಂತಹ ಅಮಾನವೀಯ ಶಿಕ್ಷೆ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಡಿವೈಎಸ್ಪಿ ಗಿರೀಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮುಖ್ಯ ನಿಜ, ಆದರೆ ಶಿಕ್ಷೆಯ ಹೆಸರಿನಲ್ಲಿ ಸಿಬ್ಬಂದಿಯ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಿಎಸ್&zwnj;ಐ ನೇತ್ರಾವತಿ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗುತ್ತಿದ್ದು, ತನಿಖಾ ವರದಿಯ ನಂತರ ಅವರ ವಿರುದ್ಧ ಯಾವ ರೀತಿಯ ಕ್ರಮ ಜರುಗಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆಯಾಗಿ, ರಕ್ಷಣೆ ನೀಡಬೇಕಾದ ಪೊಲೀಸರೇ ತಮ್ಮ ಅಧಿಕಾರಿಯ ದರ್ಪಕ್ಕೆ ಬಲಿಯಾಗಿ ಆಸ್ಪತ್ರೆ ಸೇರಿರುವುದು ಇಲಾಖೆಗೆ ಮುಜುಗರ ತಂದಿಟ್ಟಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-police-chitradurga-chikkajajuru-psi-netravathi-punishes-12-police-staff-in-sunlight-sat-d6s5l92"/>
        </item>
        <item>
            <title><![CDATA[ಅನುದಾನ ಕೊರತೆ ಸ್ಥಗಿತವಾದ ₹21 ಸಾವಿರ ಕೋಟಿ ಭದ್ರಾ ಮೇಲ್ದಂಡೆ ಯೋಜನೆ: ಕೆಲಸವೇ ಇಲ್ಲದೆ ಕಚೇರಿ ಕಾಯೋಕೆ ನೂರೆಂಟು ಮಂದಿ!]]></title>
            <link>https://kannada.asianetnews.com/gallery/karnataka-districts/rs-21000-crore-bhadra-upper-canal-project-stalled-due-to-lack-of-funds-in-karnataka-gdp-dgc2686</link>
            <guid isPermaLink="true">https://kannada.asianetnews.com/gallery/karnataka-districts/rs-21000-crore-bhadra-upper-canal-project-stalled-due-to-lack-of-funds-in-karnataka-gdp-dgc2686</guid>
            <pubDate>Sat, 14 Mar 2026 23:13:23 +0530</pubDate>
            <description><![CDATA[&lt;p&gt;₹21 ಸಾವಿರ ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆ ಅನುದಾನದ ಕೊರತೆಯಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಚೇರಿ ಸಿಬ್ಬಂದಿ ಕೆಲಸವಿಲ್ಲದೆ ಕಾಲ ಕಳೆಯುತ್ತಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಕೇಂದ್ರ ,ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಯಿಂದಾಗಿ ಭವಿಷ್ಯ ಅತಂತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkppbmr5dm5v5d5ddr6h8e98,imgname--------1773509399301.jpg" type="image/jpeg" height="390" width="690"/>
            <content:encoded><![CDATA[&lt;p&gt;₹21 ಸಾವಿರ ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆ ಅನುದಾನದ ಕೊರತೆಯಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಚೇರಿ ಸಿಬ್ಬಂದಿ ಕೆಲಸವಿಲ್ಲದೆ ಕಾಲ ಕಳೆಯುತ್ತಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಕೇಂದ್ರ ,ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಯಿಂದಾಗಿ ಭವಿಷ್ಯ ಅತಂತ್ರವಾಗಿದೆ.&lt;/p&gt;&lt;img&gt;&lt;p&gt;ಕಚೇರಿಗೆ ಬರ್ತಾರೆ, ಅಟೆಂಡೆನ್ಸ್ ಗೆ ಸಹಿ ಹಾಕ್ತಾರೆ. ಹಾಗೆ ಒಂದೆರೆಡು ಬಾರಿ ಚಹ ಹೀರಿ ಹರಟೆ ಹೊಡೆದು ವಾಪಾಸ್ಸಾಗ್ತಾರೆ. ವಾಟ್ಸಾಪ್ ಚಾಟಿಂಗ್ ಮಾಡ್ತಾ, ರೀಲ್ತ್ ನೋಡ್ತ ಹೇಗೋ ಎಂಟು ತಾಸು ಕಾಲ ಕಳಿತಾರೆ. ಒಂದರ್ಥದಲ್ಲಿ ಕಚೇರಿ ಕಾಯುವ ವಾಚ್ ಮನ್ ಕೆಲಸ ಇವರದು. ಫೈಲ್ಸ್ ನೋಡಂಗಿಲ್ಲ, ಫೀಲ್ಡ್ ವಿಜಿಟ್ ಮಾಡಬೇಕು ಎಂಬ ಉಸಾಬರಿಗಳೇ ಇಲ್ಲ.&lt;/p&gt;&lt;img&gt;&lt;p&gt;ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಕಚೇರಿಯ ದೃಶ್ಯವಿದು. 21 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮಾಡಲು ಕೆಲಸವೇ ಇಲ್ಲ. ಅನುದಾನ ಬಾರದೆ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಕೆಲಸ ಸ್ಥಗಿತವಾಗಿರುವುದರಿಂದ ಕಾಮಗಾರಿ ಪರಿಶೀಲನೆ ನಡೆಸಲು ಅಧಿಕಾರಿಗಳು ಹೋಗದಂತಾಗಿದೆ. ವಾಹನಗಳ ಡೀಸೆಲ್ ಗೂ ಹಿಂದೆ ಮುಂದೆ ನೋಡುವಂತಹ ಪರಿಸ್ಥಿತಿ ನಿರ್ಮಾ್ಣವಾಗಿದೆ. ಸದ್ಯ ಸಂಬಳ ಬರುತ್ತಿದೆ ಎಂಬುದೇ ನೌಕರರಿಗೆ ಸಮಾಧಾನಕರ ಸಂಗತಿ.&lt;/p&gt;&lt;img&gt;&lt;p&gt;ಭದ್ರಾ ಮೇಲ್ದಂಡೆಯ ಬಿಆರ್&zwnj;ಪಿ ಹಾಗೂ ಚಿತ್ರದುರ್ಗ ಡಿವಿಜನ್ ಸೇರಿ 628 ಮಂಜೂರಾದ ಹುದ್ದೆಗಳಿದ್ದರೆ 407 ಹುದ್ದೆ ಖಾಲಿ ಇವೆ. 221 ಮಂದಿ ರೆಗ್ಯುಲರ್ ಹಾಗೂ 205 ಮಂದಿ ಹೊರಗುತ್ತಿಗೆ ನೌಕರರು ಸೇರಿದಂತೆ ಹಾಲಿ 426 ಮಂದಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ ತಿಂಗಳ ಈ ವೇಳೆ ಎಲ್ಲ ಕಚೇರಿಯಲ್ಲಿ ಉದ್ಯೋಗಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಕೊಟ್ಟಿರುವ ಟಾರ್ಗೆಟ್ ಮುಗಿಸಲು ಯತ್ನಿಸುತ್ತಿದ್ದಾರೆ. ಆದರೆ ಭದ್ರಾ ಮೇಲ್ದಂಡೆ ಕಚೇರಿಯದು ಬೇರೆಯದೇ ಕತೆ ಇದೆ. ಅನುದಾನ ಇಲ್ಲದ ಕಾರಣ ಫೈಲ್ ಗಳು ಮಾತಾಡುತ್ತಿಲ್ಲ, ಗುರಿಗಳು ದಿಕ್ಕು ತಪ್ಪಿವೆ.&lt;/p&gt;&lt;img&gt;&lt;p&gt;ಭದ್ರಾ ಮೇಲ್ದಂಡೆ ಯೋಜನೆಯಡಿ ಎರಡೂ ಡಿವಿಜನ್ ಸೇರಿ ಫೆಬ್ರವರಿ ಅಂತ್ಯಕ್ಕೆ ಒಟ್ಟಾರೆ 2955 ಕೋಟಿ ರೂಪಾಯಿ ಬಾಕಿ ಬಿಲ್ಲುಗಳಿವೆ. ಸರ್ಕಾರ ಸಂಬಳ ಬಿಟ್ಟರೆ ಇತರೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಬಾಕಿ ಬಿಲ್ಲುಗಳ ಭಾರ ತಾಳಲಾರದೆ ಇಡೀ ಇಲಾಖೆ ಕಂಪಿಸುತ್ತಿದೆ. ಗುತ್ತಿಗೆದಾರರು ಇಲಾಖೆಯ ಉಸಾಬರಿಯೇ ಬೇಡವೆಂಬ ತೀರ್ಮಾನಕ್ಕೆ ಬಂದಂತಿದ್ದು ಈಗಾಗಲೇ ಮಾಡಿರುವ ಕಾಮಗಾರಿ ಬಿಲ್ಲು ಪಡೆಯಲು ನ್ಯಾಯಾಲಯದ ಕಟೆಕಟೆ ಹತ್ತುವ ನಿಟ್ಟಿನಲ್ಲಿ ಆಲೋಚನೆಗಳ ನಡೆಸಿದ್ದಾರೆ.&lt;/p&gt;&lt;img&gt;&lt;p&gt;ಭದ್ರಾ ಮೇಲ್ಡಂಡೆಗೆ ಕೇಂದ್ರ ಸರ್ಕಾರ 5300 ಕೋಟಿ ಹಾಗೂ ರಾಜ್ಯ ಸರ್ಕಾರ ಕನಿಷ್ಟ 5 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲೆಯ ಜನತೆ ಒತ್ತಾಯಿಸಿದ್ದರೂ ಉಭಯ ಸರ್ಕಾರಗಳ ಕಿವಿಗೆ ಹೋಗಿಲ್ಲ. ಕೇಂದ್ರ ಸರ್ಕಾರ ಘೋಷಿಸಿದ ಅನುದಾನ ಮೊದಲು ಕೊಡಲಿ ಎಂದು ರಾಜ್ಯ ಹಾಗೂ ಕೇಂದ್ರ ಅನುದಾನ ನೀಡುತ್ತದೆ ಎಂಬ ಕಾರಣಕ್ಕೆ ಯೋಜನೆ ಆರಂಭಿಸಿರಲ್ಲವೆಂದು ಕೇಂದ್ರ ಜಟಾಪಟಿಗಿಳಿದಿವೆ. ಕನಿಷ್ಠ ಕಾಳಜಿಗಳು ಗೋಚರವಾಗುತ್ತಿಲ್ಲ.&lt;/p&gt;&lt;img&gt;&lt;p&gt;ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಯಲು ನಿರ್ಮಿಸಲಾದ ಕಾಲುವೆಗಳು ಬಿಸಿಲಿನ ಝಳಕ್ಕೆ ಬಿರುಕು ಬಿಡುತ್ತಿವೆ. ಅನುದಾನ ಬಿಡುಗಡೆ ವಿಳಂಬವಾದಷ್ಟೂ ಕಾಮಗಾರಿಗಳು ಅಡ್ಡ ಪರಿಣಾಮ ಬೀರುತ್ತವೆ. ಹೊಳಲ್ಕೆರೆ ತಾಲೂಕಿನ ಕೆರೆಗಳ ತುಂಬಿಸಿ ಗೋನೂರುವರೆಗೆ ನೀರು ಹಾಯಿಸಲು ಕನಿಷ್ಟ 300 ಕೋಟಿ ರೂಪಾಯಿ ಅನುದಾನ ನೀಡುವಂತೆ ಜಿಲ್ಲೆಯ ಜನಪ್ರತಿನಿಧಿಗಳು ರಾಜ್ಯ ಸರ್ಕಾರದ ಮುಂದೆ ಮಂಡಿಯೂರಿದ್ದರೂ ಫಲ ನೀಡಿಲ್ಲ. ಸಿದ್ದರಾಮಯ್ಯ ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲೂ ಭದ್ರಾ ಮೇಲ್ದಂಡೆಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಕಾಮಗಾರಿ ನೆನೆಗುದಿಗೆ ಬೀಳುವ ಎಲ್ಲ ಅಪಾಯಗಳು ಗೋಚರಿಸಿವೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/rs-21000-crore-bhadra-upper-canal-project-stalled-due-to-lack-of-funds-in-karnataka-gdp-dgc2686"/>
        </item>
        <item>
            <title><![CDATA[ಯುಗಾದಿ ಹಬ್ಬ ಮಾಡುತ್ತಿದ್ದವರ ಮೇಲೆ ಆಸಿಡ್ ಎರಚಿದ ಸುಹಿಲ್ ಭಾಷಾ; ಮಗು ಸೇರಿ ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ!]]></title>
            <link>https://kannada.asianetnews.com/karnataka-districts/chitradurga-malappanahatti-acid-attack-ex-husband-assaults-five-people-tasina-banu-sat/articleshow-fpx2i66</link>
            <guid isPermaLink="true">https://kannada.asianetnews.com/karnataka-districts/chitradurga-malappanahatti-acid-attack-ex-husband-assaults-five-people-tasina-banu-sat/articleshow-fpx2i66</guid>
            <pubDate>Thu, 19 Mar 2026 19:04:23 +0530</pubDate>
            <description><![CDATA[&lt;p&gt;ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಯುಗಾದಿ ಹಬ್ಬದ ದಿನದಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾಜಿ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km34vg2erwc0pa270kcykktg,imgname-chitradurga-acid-case-1773927252046.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಮಾ.19): ಕೋ&lt;/strong&gt;ಟೆ ನಾಡು ಚಿತ್ರದುರ್ಗದಲ್ಲಿ ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾಜಿ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಸಿಡ್ ದಾಳಿ ನಡೆಸಿ, ತನ್ನ ಹೆಂಡತಿಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಅಮಾನುಷ ಕೃತ್ಯ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.&lt;/p&gt;&lt;h2&gt;&lt;strong&gt;ಪ್ರೀತಿ ವಿವಾಹವೇ ಮುಳುವಾಯಿತೇ?:&lt;/strong&gt;&lt;/h2&gt;&lt;p&gt;ಆರೋಪಿ ಸುಹಿಲ್ ಭಾಷಾ ಮತ್ತು ತಾಸಿನಾ ಬಾನು ಎಂಬುವವರು ಈ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗಳಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಆಟೋ ಚಾಲಕನಾಗಿದ್ದ ಸುಹಿಲ್ ಭಾಷಾ ತನ್ನ ಪತ್ನಿಗೆ ವಿಪರೀತ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪತಿಯ ಕಾಟ ತಾಳಲಾರದೆ ತಾಸಿನಾ ಬಾನು ಕೆಲವು ತಿಂಗಳ ಹಿಂದೆ ಆತನಿಂದ ದೂರವಾಗಿ ಬೆಂಗಳೂರಿಗೆ ತೆರಳಿ ಅಲ್ಲಿ ವಾಸವಾಗಿದ್ದರು.&lt;/p&gt;&lt;h2&gt;&lt;strong&gt;ಹಬ್ಬದ ಸಂಭ್ರಮದ ನಡುವೆ ರಕ್ತಪಾತ:&lt;/strong&gt;&lt;/h2&gt;&lt;p&gt;ಬೆಂಗಳೂರಿನಲ್ಲಿದ್ದ ತಾಸಿನಾ ಬಾನು ಅವರು ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿರುವ ತಮ್ಮ ಹಿರಿಯ ಸಹೋದರಿ ನಗ್ಮಾ ನಾಯಕ (ಅಂತರ್ ಧರ್ಮೀಯ ಮದುವೆ) ಅವರ ಮನೆಗೆ ಬಂದಿದ್ದರು. ಈ ವಿಷಯ ತಿಳಿದ ಮಾಜಿ ಪತಿ ಸುಹಿಲ್ ಭಾಷಾ, ಪೂರ್ವಯೋಜಿತವಾಗಿ ಮಚ್ಚು ಮತ್ತು ಆಸಿಡ್ ಹಿಡಿದುಕೊಂಡು ನಗ್ಮಾ ನಾಯಕ ಅವರ ಮನೆಗೆ ನುಗ್ಗಿದ್ದಾನೆ. ಮನೆಯೊಳಗೆ ನುಗ್ಗಿದ ತಕ್ಷಣ ಸುಹಿಲ್, ತಾಸಿನಾ ಬಾನು ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ತಡೆಯಲು ಬಂದ ಮನೆಯವರ ಮೇಲೆ ಆಸಿಡ್ ಎರಚಿದ್ದಾನೆ.&lt;/p&gt;&lt;p&gt;ಈ ದಾಳಿಯಲ್ಲಿ ತಾಸಿನಾ ಬಾನು, ಅವರ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾಳ ಪುತ್ರಿ ಇಕ್ರಾ ಹಾಗೂ ಹಿರಿಯ ಸಹೋದರಿ ನಗ್ಮಾ ನಾಯಕ ಸೇರಿ ಐವರಿಗೂ ತೀವ್ರ ಗಾಯಗಳಾಗಿವೆ. ಐವರ ಮೇಲೂ ಆಸಿಡ್ ಬಿದ್ದಿದ್ದು, ದೇಹದ ಹಲವು ಭಾಗಗಳು ಸುಟ್ಟುಹೋಗಿವೆ. ದಾಳಿಯ ನಂತರ ಆರೋಪಿ ಸುಹಿಲ್ ಭಾಷಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ಐವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚಿನೇಟು ಮತ್ತು ಆಸಿಡ್ ದಾಳಿಯಿಂದ ತತ್ತರಿಸಿರುವ ಕುಟುಂಬಸ್ಥರ ಪೈಕಿ ತಾಸಿನಾ ಬಾನು ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ತನಿಖೆ:&lt;/strong&gt;&lt;/h2&gt;&lt;p&gt;ಘಟನಾ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ನೆಹರು ನಗರದ ನಿವಾಸಿಯಾಗಿರುವ ಆರೋಪಿ ಸುಹಿಲ್ ಭಾಷಾ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದು, ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಪತ್ನಿ ತನ್ನ ಸಂಬಂಧ ಕಡಿದುಕೊಂಡಿದ್ದಾಳೆ ಎಂಬ ಕೋಪದಿಂದಲೇ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಚಿತ್ರದುರ್ಗದಲ್ಲಿ ಭೀಕರ ಆಸಿಡ್ ದಾಳಿ ನಡೆದಿರುವುದು ನಾಗರಿಕರನ್ನು ಬೆಚ್ಚಿಬೀಳಿಸಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/chitradurga-malappanahatti-acid-attack-ex-husband-assaults-five-people-tasina-banu-sat/articleshow-fpx2i66"/>
        </item>
        <item>
            <title><![CDATA[ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್ ವಾಗ್ದಾಳಿ]]></title>
            <link>https://kannada.asianetnews.com/politics/r-ashok-attack-cm-siddaramaiah-karnataka-government-gvd/articleshow-gazwz9f</link>
            <guid isPermaLink="true">https://kannada.asianetnews.com/politics/r-ashok-attack-cm-siddaramaiah-karnataka-government-gvd/articleshow-gazwz9f</guid>
            <pubDate>Wed, 01 Apr 2026 19:06:18 +0530</pubDate>
            <description><![CDATA[&lt;p&gt;ದುರಾಡಳಿತ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು ಸಿಎಂ ಸಿದ್ದರಾಮಯ್ಯ ಸಾಲದರಾಮಯ್ಯ ಆಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಶೋಕ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k0exkpzxn1w24vmybnqkkjn8,imgname-r-ashok-siddaramaiah-1752847473661.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.01):&lt;/strong&gt; ಈ ಸರ್ಕಾರ ದುರಾಡಳಿತ, ಭ್ರಷ್ಟಾಚಾರ, ಶೇ.60ರಷ್ಟು ಕಮೀಷನ್&zwj;ನಲ್ಲಿ ಮುಳುಗಿದೆ. ಈ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು ಸಿಎಂ ಸಿದ್ದರಾಮಯ್ಯ ಸಾಲದರಾಮಯ್ಯ ಆಗಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಶೋಕ್ ವಾಗ್ದಾಳಿ ನಡೆಸಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 1 ಲಕ್ಷ 32 ಸಾವಿರ ಕೋಟಿ ರು. ಸಾಲದಲ್ಲಿ ಮುಳುಗಿದೆ. ಸಿದ್ದರಾಮಯ್ಯ ಒಬ್ಬನೇ 4 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ.&lt;/p&gt;&lt;p&gt;ಒಬ್ಬರ ತಲೆ ಮೇಲೆ 80 ಸಾವಿರ ಸಾಲದ ಹೊರೆ ಏರಿದೆ. ಈ ಸರ್ಕಾರ ನಂಬಿ ಕುಳಿತರೆ ಅಧೋಗತಿ ಆಗಲಿದೆ. ಅನ್ನಭಾಗ್ಯದ್ದು 750 ಕೋಟಿ ಕೊಟ್ಟಿಲ್ಲ. ಸಿದ್ದರಾಮಯ್ಯ ಸಾಲಗಾರ ಆಗಿದ್ದಾನೆ ಎಂದು ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಈ ಸರ್ಕಾರ ಮುಂದೆ ಗೆಲ್ಲಲ್ಲ. ಜನರು ಈ ಸರ್ಕಾರವನ್ನು ಕಿತ್ತೊಗೆಯುತ್ತಾರೆ. ಇವೆಲ್ಲವೂ ಚುನಾವಣೆಗೆ ಪ್ರತಿಬಿಂಬ ಆಗಲಿವೆ. ಇದನ್ನೆಲ್ಲಾ ಪರಿಗಣಿಸಿ ಜನರು ಬಿಜೆಪಿ ಬೆಂಬಲಿಸಿ ಮತ ಹಾಕ್ತಾರೆ. ಬಿಜೆಪಿಯ ಕಳ್ಳೆತ್ತುಗಳಿಗೆ ವೋಟ್ ಹಾಕಬೇಡಿ ಎಂಬ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದರು.&lt;/p&gt;&lt;p&gt;ಡಿಕೆಶಿ, ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಕುಂಟೆತ್ತುಗಳು. ಡಿಕೆಶಿ, ಸಿದ್ದರಾಮಯ್ಯ ಇಬ್ಬರು ಸಹ ಒಬ್ಬರ ದಾರಿಗೆ ಮತ್ತೊಬ್ಬರು ಬರುವುದಿಲ್ಲ. ಅಧಿಕಾರಕ್ಕಾಗಿ ಡಿಕೆಶಿ ಬಕಪಕ್ಷಿಯಂತೆ ಕಾಯುತ್ತಿದ್ದಾರೆ. ಕುಂಟೆತ್ತುಗಳು ಬೇಡವೆಂದು ಜನ ತೀರ್ಮಾನಿಸಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಹೆಚ್ಚು ಸಾಲ ಮಾಡದೇ ಅಭಿವೃದ್ಧಿಗೆ ಒತ್ತು ನೀಡಲಾಗಿತ್ತು. ಆದರೆ ಈ ಸರ್ಕಾರ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಮಾಡಿಲ್ಲ. ಏನೇನು ಉದ್ಘಾಟನೆ ಮಾಡ್ತಿದ್ದಾರೆ ಅವೆಲ್ಲವೂ ಬಿಜೆಪಿ ಅವಧಿಯವು.&lt;/p&gt;&lt;h2&gt;&lt;strong&gt;ಮಾರಿಹಬ್ಬ ಶುರು&lt;/strong&gt;&lt;/h2&gt;&lt;p&gt;ಕೇಂದ್ರ ಸರ್ಕಾರ ಜನರ ಮೇಲೆ ಬೆಲೆ ಏರಿಕೆ ಯುದ್ಧ ಮಾಡ್ತಿದೆ ಎಂಬ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ತುಪ್ಪದ ಬೆಲೆ, ಜಿಎಸ್.ಟಿ ಕಡಿಮೆ ಮಾಡಿದೆ. ಕೇಂದ್ರ ಕಡಿಮೆ ಮಾಡಿದ್ರೆ, ರಾಜ್ಯ ಸರ್ಕಾರ ಎಲ್ಲವನ್ನು ಜಾಸ್ತಿ ಮಾಡಿದೆ. ಎರಡು ಉಪಚುನಾವಣೆ ಬಳಿಕ ಜನರ ಮೇಲೆ ಎಲ್ಲಾ ತೆರಿಗೆ ಹಾಕ್ತಾರೆ. ಇನ್ಮುಂದೆ ರಾಜ್ಯ ಸರ್ಕಾರ ಮಾರಿಹಬ್ಬ ಶುರು ಮಾಡಲಿದೆ. ಜನರು ಕಾಂಗ್ರೆಸ್ ಸರ್ಕಾರಕ್ಕೆ ಈಗ ಬುದ್ಧಿ ಕಲಿಸಬೇಕಾಗಿದೆ ಎಂದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/r-ashok-attack-cm-siddaramaiah-karnataka-government-gvd/articleshow-gazwz9f"/>
        </item>
        <item>
            <title><![CDATA[ಚಿತ್ರದುರ್ಗ ಹಳಿ ಮೇಲೆ ಕೆಟ್ಟು ನಿಂತ ಹುಬ್ಬಳ್ಳಿ-ಬೆಂಗಳೂರು ರೈಲು,  ಟಾಟಾನಗರ ಎಕ್ಸ್‌ಪ್ರೆಸ್ ರೈಲು ಕೂಡ ಸ್ಥಗಿತ!]]></title>
            <link>https://kannada.asianetnews.com/karnataka-districts/train-services-disrupted-in-chitradurga-after-technical-fault-hubballi-bengaluru-train-delayed-gdp/articleshow-grmg4h7</link>
            <guid isPermaLink="true">https://kannada.asianetnews.com/karnataka-districts/train-services-disrupted-in-chitradurga-after-technical-fault-hubballi-bengaluru-train-delayed-gdp/articleshow-grmg4h7</guid>
            <pubDate>Sun, 12 Apr 2026 18:31:02 +0530</pubDate>
            <description><![CDATA[ಚಿತ್ರದುರ್ಗ ರೈಲ್ವೆ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಹುಬ್ಬಳ್ಳಿ-ಬೆಂಗಳೂರು ರೈಲು ಕೆಟ್ಟು ನಿಂತಿದೆ. ಈ ಕಾರಣದಿಂದ ಬೆಂಗಳೂರು-ಟಾಟಾನಗರ ಎಕ್ಸ್&zwnj;ಪ್ರೆಸ್ ರೈಲಿನ ಸಂಚಾರಕ್ಕೂ ಅಡಚಣೆಯುಂಟಾಗಿ, ಎರಡೂ ರೈಲುಗಳು ಸುಮಾರು ಅರ್ಧ ಗಂಟೆ ವಿಳಂಬವಾಗಿ ಸಂಚರಿಸಿದವು.]]></description>
            <media:content url="https://static.asianetnews.com/images/w-1280,h-720,format-jpg,imgid-01kp0w7z4h3585wsk41m9eq8e7,imgname-hubballi-bengaluru-train-1775998598289.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ವ್ಯತ್ಯಯ ಉಂಟಾದ ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ತಾಂತ್ರಿಕ ದೋಷದಿಂದ ರೈಲು ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ, ಮತ್ತೊಂದು ರೈಲಿನ ಸಂಚಾರಕ್ಕೂ ತಡೆಯಾದ ಘಟನೆ ನಡೆದಿದೆ.&lt;/p&gt;&lt;h2&gt;ರೈಲ್ವೆ ನಿಲ್ದಾಣದಲ್ಲೇ ಕೆಟ್ಟು ನಿಂತ ರೈಲು&lt;/h2&gt;&lt;p&gt;ಚಿತ್ರದುರ್ಗ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ&ndash;ಬೆಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ತಾಂತ್ರಿಕ ದೋಷ ಉಂಟಾಯಿತು. ಇದರ ಪರಿಣಾಮವಾಗಿ ರೈಲು ನಿಲ್ದಾಣದಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಎದುರಾಯಿತು. ಈ ವೇಳೆ ಪ್ರಯಾಣಿಕರು ಕೆಲಕಾಲ ಗೊಂದಲಕ್ಕೊಳಗಾದರು.&lt;/p&gt;&lt;h2&gt;ತಕ್ಷಣ ದುರಸ್ಥಿಗೆ ಮುಂದಾದ ಸಿಬ್ಬಂದಿ&lt;/h2&gt;&lt;p&gt;ಘಟನೆ ತಿಳಿದ ತಕ್ಷಣ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ಥಿ ಕಾರ್ಯವನ್ನು ಆರಂಭಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ದುರಸ್ಥಿ ಕಾರ್ಯ ನಡೆಸಿ, ರೈಲನ್ನು ಪುನಃ ಸಂಚಾರಕ್ಕೆ ಸಜ್ಜುಗೊಳಿಸಲಾಯಿತು.&lt;/p&gt;&lt;h2&gt;ಇನ್ನೊಂದು ರೈಲು ಸಂಚಾರಕ್ಕೂ ವ್ಯತ್ಯಯ&lt;/h2&gt;&lt;p&gt;ಹುಬ್ಬಳ್ಳಿ&ndash;ಬೆಂಗಳೂರು ರೈಲು ಕೆಟ್ಟು ನಿಂತ ಪರಿಣಾಮ, ಅಳಿಯೂರು ಸಮೀಪದಲ್ಲಿ ಬೆಂಗಳೂರು&ndash;ಟಾಟಾನಗರ ಎಕ್ಸ್&zwnj;ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಮೊದಲ ರೈಲಿನ ದುರಸ್ಥಿ ಕಾರ್ಯ ಪೂರ್ಣಗೊಳ್ಳುವವರೆಗೆ ಎರಡನೇ ರೈಲು ಮುಂದುವರಿಯಲು ಸಾಧ್ಯವಾಗಲಿಲ್ಲ.&lt;/p&gt;&lt;h2&gt;ತಡವಾಗಿ ಸಂಚರಿಸಿದ ರೈಲುಗಳು&lt;/h2&gt;&lt;p&gt;ದುರಸ್ಥಿ ಕಾರ್ಯ ಮುಗಿದ ನಂತರ ಎರಡೂ ರೈಲುಗಳು ಪುನಃ ಸಂಚಾರ ಆರಂಭಿಸಿದರೂ, ಸುಮಾರು ಅರ್ಧ ಗಂಟೆಯಷ್ಟು ವಿಳಂಬವಾಗಿದ್ದು ಪ್ರಯಾಣಿಕರಿಗೆ ತೊಂದರೆ ಉಂಟಾಯಿತು.&lt;/p&gt;&lt;p&gt;ಒಟ್ಟಿನಲ್ಲಿ, ತಾಂತ್ರಿಕ ದೋಷದಿಂದ ಉಂಟಾದ ಈ ತಾತ್ಕಾಲಿಕ ಅಡಚಣೆ ರೈಲ್ವೆ ಸಂಚಾರದಲ್ಲಿ ವಿಳಂಬಕ್ಕೆ ಕಾರಣವಾದರೂ, ಸಿಬ್ಬಂದಿಯ ತ್ವರಿತ ಕ್ರಮದಿಂದ ಪರಿಸ್ಥಿತಿ ಶೀಘ್ರದಲ್ಲೇ ನಿಯಂತ್ರಣಕ್ಕೆ ಬಂದಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/train-services-disrupted-in-chitradurga-after-technical-fault-hubballi-bengaluru-train-delayed-gdp/articleshow-grmg4h7"/>
        </item>
        <item>
            <title><![CDATA[ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ:  5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ]]></title>
            <link>https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi</link>
            <guid isPermaLink="true">https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi</guid>
            <pubDate>Tue, 07 Apr 2026 13:39:36 +0530</pubDate>
            <description><![CDATA[ಕರ್ನಾಟಕದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knkfhg7nx4mhvqasnb7ez237,imgname-lokayukta-raids-1775549071605.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ. ಈ ಮೂಲಕ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಸಮಗ್ರ ದಾಳಿಗಳು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿವೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ.&lt;/p&gt;&lt;h2&gt;ಚಿತ್ರದುರ್ಗದಲ್ಲಿ ವಿ.ಆರ್.ಎಸ್ ಪಡೆದ ಮಹಿಳಾ ಅಧಿಕಾರಿ ಮನೆ ಮೇಲೆ ದಾಳಿ&lt;/h2&gt;&lt;p&gt;ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೆದೇಹಳ್ಳಿ ಬಡಾವಣೆಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಒಂದು ವರ್ಷದ ಹಿಂದೆ ವಿ.ಆರ್.ಎಸ್ ಪಡೆದಿದ್ದ ಸುಶೀಲಮ್ಮ ಅವರು ಸೇವೆಯಲ್ಲಿದ್ದಾಗ ಭ್ರಷ್ಟಾಚಾರ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲೋಕಾಯುಕ್ತ ಎಸ್&zwnj;ಪಿ ವಾಸುದೇವರಾಮ್ ಹಾಗೂ ಡಿವೈಎಸ್ಪಿ ಮೃತ್ಯುಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ.&lt;/p&gt;&lt;h2&gt;ಮೈಸೂರು AEE ಮನೆಗೆ ದಾಳಿ&lt;/h2&gt;&lt;p&gt;ಮೈಸೂರು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ರೇವಣ್ಣ ವಿರುದ್ಧವೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮೈಸೂರಿನ ಕಚೇರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿರುವ ಎರಡು ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಎಸ್&zwnj;ಪಿ ಟಿ.ಜೆ. ಉದೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಶೈಲೇಂದ್ರ ಮತ್ತು ವೆಂಕಟೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್&zwnj;ಪೆಕ್ಟರ್ ಶಶಿಕುಮಾರ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.&lt;/p&gt;&lt;h2&gt;ಬಳ್ಳಾರಿ ಮೀನುಗಾರಿಕಾ ಇಲಾಖೆಯ ನಿರ್ದೇಶಕನಿಗೆ ಸೇರಿದ &amp;nbsp;4 ಸ್ಥಳಗಳಲ್ಲಿ ದಾಳಿ&lt;/h2&gt;&lt;p&gt;ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ. ಸಿದ್ಧಾರ್ಥನಗರದಲ್ಲಿರುವ ನಿವಾಸ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಶಿವಣ್ಣ ವಿರುದ್ಧ 10ಕ್ಕೂ ಹೆಚ್ಚು ದೂರುಗಳು ಲೋಕಾಯುಕ್ತರಿಗೆ ಸಲ್ಲಿಕೆಯಾಗಿದ್ದವು ಎನ್ನಲಾಗಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆದಾಯ ಗಳಿಕೆ ಆರೋಪಗಳ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಅವರು ಬಳಸುತ್ತಿದ್ದ ಸರ್ಕಾರಿ ಬೊಲೆರೋ ವಾಹನದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿರುವುದು ಕೂಡ ಗಮನಾರ್ಹ ಸಂಗತಿಯಾಗಿದೆ.&lt;/p&gt;&lt;h2&gt;ಶಿವಮೊಗ್ಗ ಜಿಲ್ಲಾಧಿಕಾರಿ ಶೋಭಾ ಕೆ.ಆರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ&lt;/h2&gt;&lt;p&gt;ಶಿವಮೊಗ್ಗದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶೋಭಾ ಕೆ.ಆರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕಾರಿಪುರದ ಮನೆ, ತರಲಘಟ್ಟದ ಫಾರ್ಮ್ ಹೌಸ್, ಆಚಾಪುರದಲ್ಲಿರುವ ಶಾಲೆ ಸೇರಿದಂತೆ ಒಟ್ಟು ನಾಲ್ಕು ಕಡೆ ಪರಿಶೀಲನೆ ನಡೆದಿದೆ. ಜೊತೆಗೆ ಅವರ ಸಹೋದ್ಯೋಗಿ ರಾಘವೇಂದ್ರ ಅವರ ಚಾಲುಕ್ಯನಗರ ನಿವಾಸದಲ್ಲಿಯೂ ಶೋಧ ಕಾರ್ಯ ನಡೆದಿದೆ. ಲೋಕಾಯುಕ್ತ ಎಸ್&zwnj;ಪಿ ಕೌಲಾಂಪುರ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ.&lt;/p&gt;&lt;h2&gt;ಬೆಳಗಾವಿಯಲ್ಲಿ ಮಧನಸಿಂಗ ರಜಪೂತ್ ವಿರುದ್ಧ ಭ್ರಷ್ಟಾಚಾರ ಆರೋಪ&lt;/h2&gt;&lt;p&gt;ಬೆಳಗಾವಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಸದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮಧನಸಿಂಗ ರಜಪೂತ್ ವಿರುದ್ಧವೂ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತ ದಾಳಿ ನಡೆದಿದೆ. ಆಂಜನೇಯನಗರದಲ್ಲಿರುವ ಮನೆ ಸೇರಿದಂತೆ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಹುಕ್ಕೇರಿ ಹಾಗೂ ಅಥಣಿ ತಾಲೂಕಿನ ನಿವಾಸಗಳಲ್ಲಿಯೂ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ, ಚಿನ್ನಾಭರಣ ಹಾಗೂ ಬ್ಯಾಂಕ್ ಠೇವಣಿಗಳ ಕುರಿತು ಮಹತ್ವದ ದಾಖಲೆಗಳು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಡಿಎಸ್ಪಿಗಳಾದ ಬಿ.ಎಸ್. ಪಾಟೀಲ ಮತ್ತು ಭರತ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ಮುಂದುವರಿದಿದ್ದು, ದಾಖಲೆಗಳ ಪರಿಶೀಲನೆ ಇನ್ನೂ ನಡೆಯುತ್ತಿದೆ. ಒಟ್ಟಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೇ ಸಮಯದಲ್ಲಿ ನಡೆದ ಈ ಲೋಕಾಯುಕ್ತ ದಾಳಿಗಳು ಭ್ರಷ್ಟಾಚಾರ ವಿರುದ್ಧದ ಕಠಿಣ ಕ್ರಮದ ಸೂಚನೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಹಿರಂಗವಾಗುವ ಸಾಧ್ಯತೆ ಇದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/state/lokayukta-raids-across-5-karnataka-districts-action-against-officials-over-disproportionate-assets-gdp/articleshow-imkk2wi"/>
        </item>
        <item>
            <title><![CDATA[ಒಳಮೀಸಲು ಜಾರಿ ಮೊದಲೇ ಕೃಷಿ ಇಲಾಖೆ ನೇಮಕಾತಿಗೆ ಅವಕಾಶ ಕೊಡಲ್ಲ: ಎಚ್.ಆಂಜನೇಯ]]></title>
            <link>https://kannada.asianetnews.com/karnataka-districts/h-anjaneya-internal-reservation-karnataka-job-recruitment-issue-gvd/articleshow-kflwc50</link>
            <guid isPermaLink="true">https://kannada.asianetnews.com/karnataka-districts/h-anjaneya-internal-reservation-karnataka-job-recruitment-issue-gvd/articleshow-kflwc50</guid>
            <pubDate>Tue, 21 Apr 2026 23:52:33 +0530</pubDate>
            <description><![CDATA[&lt;p&gt;ಕೃಷಿ ಇಲಾಖೆಯ ಅಧಿಕಾರಿಗಳ ಹುದ್ದೆ ಭರ್ತಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ಅವಕಾಶ ಕೊಡುವುದಿಲ್ಲ. ಒಳ ಮೀಸಲು ಜಾರಿ ನಂತರವೇ ಹುದ್ದೆಗಳ ಹಂಚಿಕೆಯಾಗಿ ಪರೀಕ್ಷೆ ಮತ್ತು ನೇಮಕಾತಿ ನಡೆಯಬೇಕೆಂದು ಎಚ್.ಆಂಜನೇಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k0zehg6269zvhnhb7ch7tck4,imgname-fbf-1753402097858.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.21):&lt;/strong&gt; ಒಳಮೀಸಲು ಜಾರಿಗೆ ಸರ್ಕಾರ ತೀರ್ಮಾನ ಕೈಗೊಳ್ಳುವ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೃಷಿ ಇಲಾಖೆಯ ಅಧಿಕಾರಿಗಳ ಹುದ್ದೆ ಭರ್ತಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ಅವಕಾಶ ಕೊಡುವುದಿಲ್ಲ. ಒಳ ಮೀಸಲು ಜಾರಿ ನಂತರವೇ ಹುದ್ದೆಗಳ ಹಂಚಿಕೆಯಾಗಿ ಪರೀಕ್ಷೆ ಮತ್ತು ನೇಮಕಾತಿ ನಡೆಯಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಗೊಳಿಸದೆ ಒಂದೆ ಒಂದು ಹುದ್ದೆಯನ್ನು ತುಂಬಲು ಬಿಡುವುದಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಬುಧವಾರ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು. ಸಚಿವ ಮುನಿಯಪ್ಪ ಸೇರಿದಂತೆ ಸಮುದಾಯದ ಹಲವು ಮುಖಂಡರು ನಿಯೋಗದಲ್ಲಿ ಇರುತ್ತಾರೆ. 24 ರಂದ ನಡೆಯುವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಒಳ ಮೀಸಲು ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರುವ ವಿಶ್ವಾಸ ತಮಗಿದೆ ಎಂದರು.&lt;/p&gt;&lt;p&gt;56,432 ಹುದ್ದೆಗಳನ್ನು ಭರ್ತಿ ಮಾಡುವುದಕ್ಕೂ ಮುನ್ನ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಿ ನಮಗೆ ಸಿಗಬೇಕಾದ ಪಾಲು ಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಳಿದ್ದೇವೆ. 121 ಕೃಷಿ ಅಧಿಕಾರಿಗಳು ಹಾಗೂ 769 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿರುವುದು ಕೂಡ ನಮ್ಮ ಜನಾಂಗದ ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತಿದೆ. ಒಳ ಮೀಸಲಾತಿಗಾಗಿ 35 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೆ ಒಳ ಮೀಸಲಾತಿ ಜಾರಿಯಾಗಿದೆ. ಇತರೆ ಸಮುದಾಯಗಳ ಜೊತೆ ನಮ್ಮ ಜನಾಂಗ ಸ್ಪರ್ಧಿಸುವುದು ಕಷ್ಟ. ಅವಕಾಶದಿಂದ ವಂಚಿತರಾಗಿದ್ದೇವೆ.&lt;/p&gt;&lt;h2&gt;&lt;strong&gt;ಉದ್ಯೋಗ ಶಿಕ್ಷಣಕ್ಕೆ ಅನುಕೂಲ&lt;/strong&gt;&lt;/h2&gt;&lt;p&gt;ಶುಕ್ರವಾರ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು. ಬೇರೆಯವರಿಗೂ ನಮ್ಮಿಂದ ತೊಂದರೆಯಾಗಬಾರದೆಂದರು. ಎಲ್ಲಾ ಹುದ್ದೆಗಳ ನೇಮಕಕ್ಕೆ ಹೊರಡಿಸಿರುವ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಕೂಡಲೆ ನಿಲ್ಲಿಸಬೇಕು. ಒಳ ಮೀಸಲಾತಿಯಿಂದ ಉದ್ಯೋಗ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಯಾರು ಆಂತಕ ಪಡುವುದು ಬೇಡ. ಬಡ್ತಿಯಲ್ಲಿ ಒಳ ಮೀಸಲಾತಿ ಅನ್ವಯವಾಗಬೇಕು. ಆಂಧ್ರ, ತೆಲಂಗಾಣ ಮಾದರಿಯಂತೆ ನಮ್ಮ ರಾಜ್ಯದಲ್ಲಿಯೂ ಒಳ ಮೀಸಲಾತಿ ನೀಡಬೇಕು. ಎರಡು ಸದನದಲ್ಲೂ ಒಳ ಮೀಸಲಾತಿಗೆ ಒಪ್ಪಿಗೆಯಾಗಿದೆ. ಹಂಚಿಕೆಯಾಗುವುದೊಂದೆ ಬಾಕಿ.&lt;/p&gt;&lt;p&gt;ರಾಜ್ಯ ಸರ್ಕಾರ ಮೀನಾಮೇಷ ಎಣಿಸುವುದು ಬೇಡ. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಲಿ ಎಂದು ಹೆಚ್.ಆಂಜನೇಯ ಮನವಿ ಮಾಡಿದರು. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲು ಕೇಳುತ್ತಿದ್ದೇವೆ. ನಂತರದಲ್ಲಿ ಆರ್ಥಿಕ ಹಂಚಿಕೆಯಲ್ಲಿಯೂ ಮೀಸಲು ಬೇಕಾಗಿದೆ. ಈ ಸಂಬಂಧ ವ್ಯಾಪಕ ಕಾರ್ಯಕ್ರಮಗಳ ಹಮ್ಮಿಕೊಂಡು ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು. ಪ್ರತಿ ಜಿಲ್ಲೆಯಲ್ಲಿ ಯಾವಜಾತಿ ಜನಸಂಖ್ಯೆ ಎಷ್ಟಿದೆಯೇ ಅದರ ಆಧಾರದ ಮೇಲೆ ಆರ್ಥಿಕ ಸೌಲಭ್ಯ ವಿತರಣೆ ಆಗಬೇಕೆಂದು ಆಂಜನೇಯ ಹೇಳಿದರು.&lt;/p&gt;]]></content:encoded>
            <category>chitradurga</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/h-anjaneya-internal-reservation-karnataka-job-recruitment-issue-gvd/articleshow-kflwc50"/>
        </item>
        <item>
            <title><![CDATA[ಚಿತ್ರದುರ್ಗ: ಅತ್ತೆ ಮಗಳನ್ನು ಪ್ರೀತಿಸಿ ರಿಜಿಸ್ಟರ್ ಮದುವೆಯಾದ ಅಳಿಯ, ಮದುವೆ ಒಪ್ಪದ ಪೋಷಕರಿಂದ ರಕ್ತಸಿಕ್ತ ಸಂಧಾನ!]]></title>
            <link>https://kannada.asianetnews.com/karnataka-districts/chitradurga-clash-family-dispute-over-love-marriage-turns-violent-in-bharamasagara-village-gdp/articleshow-qafeeo9</link>
            <guid isPermaLink="true">https://kannada.asianetnews.com/karnataka-districts/chitradurga-clash-family-dispute-over-love-marriage-turns-violent-in-bharamasagara-village-gdp/articleshow-qafeeo9</guid>
            <pubDate>Fri, 03 Apr 2026 15:34:03 +0530</pubDate>
            <description><![CDATA[ಚಿತ್ರದುರ್ಗದ ಭರಮಸಾಗರದಲ್ಲಿ ಪ್ರೇಮ ವಿವಾಹದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ರಾಜಿ ಸಂಧಾನವು ಗುಂಪು ಘರ್ಷಣೆಗೆ ತಿರುಗಿದೆ. ಈ ಗಲಾಟೆಯಲ್ಲಿ ಎರಡೂ ಕಡೆಯವರು ಗಾಯಗೊಂಡಿದ್ದು, ಪೊಲೀಸರ ಸಮ್ಮುಖದಲ್ಲಿಯೇ ಹಲ್ಲೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ತೀವ್ರ ಸ್ವರೂಪ ಪಡೆದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn9crwtsra848ykhttyjr7wp,imgname-chitradurga-love-marriage-1775210623831.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಉಂಟಾಗಿ, ಗುಂಪು ಘರ್ಷಣೆಗೆ ತಿರುಗಿದ ಘಟನೆ ನಡೆದಿದೆ. ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ನಿವಾಸಿಯಾದ ಭಾವನಾ ಹಾಗೂ ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ಪ್ರೀತಿಸುತ್ತಿದ್ದರು. ಅಸಲಿಗೆ ಭಾವನಾ ತೀರ್ಥೇಶ್ವರ ನಾಯ್ಕ್ ಗೆ ಅತ್ತೆ ಮಗಳೇ ಆಗಬೇಕು. ಪ್ರೀತಿಸಿದ ಬಳಿಕ ಇಬ್ಬರೂ ವಿರೋಧ ಇದ್ದ ಹಿನ್ನೆಲೆಯಲ್ಲಿ ಪ್ರೇಮ ವಿವಾಹವಾಗಿದ್ದಾರೆ. ಈ ವಿವಾಹಕ್ಕೆ ಭಾವನಾ ಅವರ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದುವರೆಗೂ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಮುಂದುವರಿದಿತ್ತು.&lt;/p&gt;&lt;p&gt;ಫೆಬ್ರವರಿ 8ರಂದು ತೀರ್ಥೇಶ್ವರ ಮತ್ತು ಭಾವನಾ ರಿಜಿಸ್ಟರ್ ಮದುವೆಯಾಗಿದ್ದರೂ, ಈ ಸಂಬಂಧದ ಬಗ್ಗೆ ಭಾವನಾ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ತೀರ್ಥೇಶ್ವರ ನಾಯ್ಕ್ ವಿರುದ್ಧ ಮತಾಂತರದ ಆರೋಪವೂ ಕೇಳಿಬಂದಿದ್ದು, ಇದರಿಂದ ಎರಡೂ ಕುಟುಂಬಗಳ ಮಧ್ಯೆ ಪರಿಸ್ಥಿತಿ ಬಿಗಡಾಯಿಸಿತ್ತು.&lt;/p&gt;&lt;h2&gt;ರಾಜಿ ಸಂಧಾನದ ಹೆಸರಿನಲ್ಲಿ ಹಲ್ಲೆ ಆರೋಪ&lt;/h2&gt;&lt;p&gt;ಈ ವಿವಾದವನ್ನು ಬಗೆಹರಿಸಲು ಎರಡೂ ಕುಟುಂಬಸ್ಥರನ್ನು ರಾಜಿ ಸಂಧಾನಕ್ಕೆ ಕರೆಸಲಾಗಿತ್ತು. ಆದರೆ ಸಂಧಾನದ ವೇಳೆ ವಾಗ್ವಾದ ಉಂಟಾಗಿ, ಅದು ತೀವ್ರ ಗಲಾಟೆಗೆ ತಿರುಗಿದೆ. ಈ ವೇಳೆ ಭಾವನಾ ಅವರ ದೊಡ್ಡಪ್ಪ ಮಲ್ಲೇಶ ನಾಯ್ಕ್ ಸೇರಿದಂತೆ ಕೆಲವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಗಾಯಗೊಂಡ ಮಲ್ಲೇಶ ನಾಯ್ಕ್ ಸೇರಿದಂತೆ ಮೂವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h2&gt;ಪರಸ್ಪರ ಆರೋಪ-ಪ್ರತ್ಯಾರೋಪ&lt;/h2&gt;&lt;p&gt;ಇನ್ನೊಂದೆಡೆ, ತೀರ್ಥೇಶ್ವರ ನಾಯ್ಕ್ ಹಾಗೂ ಅವರ ಕುಟುಂಬದವರ ಮೇಲೂ ಹಲ್ಲೆ ನಡೆದಿರುವುದಾಗಿ ಪ್ರತಿಯಾಗಿ ಆರೋಪಿಸಲಾಗಿದೆ. ಎರಡೂ ಕಡೆಯವರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರತೆಯನ್ನು ಪಡೆದಿದೆ. ಈ ಘರ್ಷಣೆಯ ವೇಳೆ ತೀರ್ಥೇಶ್ವರ ನಾಯ್ಕ್ ಹಲ್ಲೆ ನಡೆಸುತ್ತಿರುವ ದೃಶ್ಯಗಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ, ಪೊಲೀಸರ ಸಮ್ಮುಖದಲ್ಲಿಯೇ ಹಲ್ಲೆ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದ ತಕ್ಷಣ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಭರಮಸಾಗರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಪೊಲೀಸರು ಎರಡೂ ಕುಟುಂಬಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಮನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-clash-family-dispute-over-love-marriage-turns-violent-in-bharamasagara-village-gdp/articleshow-qafeeo9"/>
        </item>
        <item>
            <title><![CDATA[ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಇನ್ಸ್‌ಪೆಕ್ಟರ್‌ಗಳ ಫೋಟೋ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ!]]></title>
            <link>https://kannada.asianetnews.com/gallery/karnataka-districts/chitradurga-horrific-accident-three-sub-inspectors-killed-photo-released-two-asi-seriously-injured-sat-qhfgpdg</link>
            <guid isPermaLink="true">https://kannada.asianetnews.com/gallery/karnataka-districts/chitradurga-horrific-accident-three-sub-inspectors-killed-photo-released-two-asi-seriously-injured-sat-qhfgpdg</guid>
            <pubDate>Sun, 15 Mar 2026 11:25:24 +0530</pubDate>
            <description><![CDATA[&lt;p&gt;ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಸ್ನೇಹಿತರ ಮದುವೆಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್ ಇನ್&zwnj;ಸ್ಪೆಕ್ಟರ್&zwnj;ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟವರ ಫೋಟೋ ರಿಲೀಸ್ ಮಾಡಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkr0ckpm0f7zj11bgt003b2r,imgname-chitradurha-accident-psi-death-1773553471188.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಸ್ನೇಹಿತರ ಮದುವೆಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್ ಇನ್&zwnj;ಸ್ಪೆಕ್ಟರ್&zwnj;ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟವರ ಫೋಟೋ ರಿಲೀಸ್ ಮಾಡಲಾಗಿದೆ.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪೊಲೀಸ್ ಇಲಾಖೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಮೂವರು ರಿಸರ್ವ್ ಸಬ್ ಇನ್&zwnj;ಸ್ಪೆಕ್ಟರ್&zwnj;ಗಳು (RSI) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ಇಲಾಖೆಯಿಂದ ಮೃತ ಇನ್ಸ್&zwnj;ಪೆಕ್ಟರ್&zwnj;ಗಳ ಫೋಟೋ ರಿವೀಲ್ ಮಾಡಲಾಗಿದೆ. ಈ ದುರಂತದಲ್ಲಿ ಮತ್ತಿಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಇವರು ರಿಸರ್ವ್ ಸಬ್ ಇನ್&zwnj;ಸ್ಪೆಕ್ಟರ್&zwnj;ಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲಗಳ ಪ್ರಕಾರ, ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು. ಕಾರು ಹೆಗ್ಗೆರೆ ಬಳಿ ಚಲಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.&lt;/p&gt;&lt;p&gt;ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು.&lt;/p&gt;&lt;img&gt;&lt;p&gt;ಈ ಅಪಘಾತದಲ್ಲಿ ಪಿಎಸ್ಐ (PSI) ಈಶ್ವರ್ ಮತ್ತು ಆರ್&zwnj;ಎಸ್&zwnj;ಐ (RSI) ಮಹಾಂತೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಇವರನ್ನು ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.&lt;/p&gt;&lt;img&gt;&lt;p&gt;ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಬಂಡಾರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, &lsquo;ಮದುವೆ ಕಾರ್ಯಕ್ರಮಕ್ಕೆಂದು ಐವರು ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಮೂವರು ಅಧಿಕಾರಿಗಳನ್ನು ನಾವು ಕಳೆದುಕೊಂಡಿದ್ದೇವೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ&rsquo; ಎಂದು ಮಾಹಿತಿ ನೀಡಿದರು.&lt;/p&gt;&lt;img&gt;&lt;p&gt;ಈ ಘಟನೆಯು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೈಂ ಸೀನ್ ಮಹಜರು ನಡೆಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವೇ ಅಥವಾ ಅತಿವೇಗವೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವ ಅಧಿಕಾರಿಗಳ ಅಕಾಲಿಕ ಮರಣವು ಪೊಲೀಸ್ ಇಲಾಖೆಯಲ್ಲಿ ಮೌನ ಆವರಿಸುವಂತೆ ಮಾಡಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಜಿಲ್ಲೆಯಾದ್ಯಂತ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/chitradurga-horrific-accident-three-sub-inspectors-killed-photo-released-two-asi-seriously-injured-sat-qhfgpdg"/>
        </item>
        <item>
            <title><![CDATA[SSLC Results 2026: ಸಾರಿಗೆ ಸಂಪರ್ಕವೇ ಇಲ್ಲದ ಕುಗ್ರಾಮದ ಕೂಲಿಕಾರರ ಮಗಳಿಗೆ SSLC ಶೇ.96.96 ಅಂಕ]]></title>
            <link>https://kannada.asianetnews.com/karnataka-districts/molakalmuru-laborer-s-daughter-krishnaveni-sslc-scored-97-percents-rav/articleshow-r3b29sz</link>
            <guid isPermaLink="true">https://kannada.asianetnews.com/karnataka-districts/molakalmuru-laborer-s-daughter-krishnaveni-sslc-scored-97-percents-rav/articleshow-r3b29sz</guid>
            <pubDate>Fri, 24 Apr 2026 04:38:13 +0530</pubDate>
            <description><![CDATA[&lt;p&gt;ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಾರಿಗೆ ಸಂಪರ್ಕವೇ ಇಲ್ಲದ ಮಲ್ಲೆ ಹರವು ಗ್ರಾಮದ ಕೂಲಿಕಾರರ ಮಗಳು ಓ.ಕೃಷ್ಣವೇಣಿ, ಎಸ್ಸೆಸ್ಸೆಲ್ಸಿ 625ಕ್ಕೆ 606 ಅಂಕ ಗಳಿಸಿ ಮಹತ್ತರ ಸಾಧನೆ. &amp;nbsp;ಬಾಂಡ್ರವಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಈ ಸಾಧನೆಗೈದು ಇತರರಿಗೆ ಸ್ಫೂರ್ತಿಯಾಗಿದ್ದಾಳೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpy9b7bm0r5ec69zqpnxpnw0,imgname-untitled-design--8--1776985415028.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮೊಳಕಾಲ್ಮೂರು (ಏ.24): &lt;/strong&gt;ಸಾರಿಗೆ ಸಂಪರ್ಕವೇ ಇಲ್ಲದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಗಡಿ ಗ್ರಾಮ ಬಾಂಡ್ರವಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೂಲಿಕಾರರ ಮಗಳು ಓ.ಕೃಷ್ಣವೇಣಿ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 606 ಅಂಕ (ಶೇ.96.96) ಗಳಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾಳೆ.&amp;nbsp;&lt;/p&gt;&lt;p&gt;ಆಧುನಿಕ ಪ್ರಪಂಚದಿಂದ ದೂರ ಉಳಿದಿರುವ ಮೂಲ ಸೌಲಭ್ಯಗಳೇ ಇಲ್ಲದ ಮಲ್ಲೆ ಹರವು ಗ್ರಾಮದಲ್ಲಿ ಪ್ರೌಢಶಾಲೆ ಇಲ್ಲದ ಪರಿಣಾಮ ಸಾರಿಗೆ ಸಂಪರ್ಕವೇ ಇಲ್ಲದ ಬಾಂಡ್ರಾವಿ ಸರ್ಕಾರಿ ಪ್ರೌಢಶಾಲೆಗೆ ಕೃಷ್ಣವೇಣಿ ದಾಖಲಾಗಿದ್ದಳು. ಮಾವನ ಮನೆಯಲ್ಲಿದ್ದುಕೊಂಡು ಪೋಷಕರ ಕಷ್ಟ ಅರಿತು ಅಧ್ಯಯನ ಮಾಡಿದ್ದಾಳೆ.&lt;/p&gt;&lt;p&gt;ಸ್ವತಂತ್ರ ಸಿಕ್ಕು 7 ದಶಕ ಕಳೆದರೂ ಮಲ್ಲೆ ಹರವು ಗ್ರಾಮಕ್ಕೆ ಸಾರಿಗೆ ಸಂಪರ್ಕವಿಲ್ಲ. ಸುತ್ತಲೂ ಗುಡ್ಡಗಾಡು ಆವರಿಸಿರುವ ಕಾಲು ದಾರಿಯಲ್ಲಿ ನಡೆದು ಮುಖ್ಯರಸ್ತೆಗೆ ಬಂದು ಸಿಕ್ಕ ವಾಹನಗಳನ್ನು ಹಿಡಿದು ಬಾಂಡ್ರವಿ ಗ್ರಾಮಕ್ಕೆ ಬರಬೇಕಿದೆ. ಕೂಲಿ ಕೆಲಸದಿಂದಲೇ ಜೀವನ ನಡೆಸುವ ತಂದೆ ಒಬಕಾಸ್ವಾಮಿ, ತಾಯಿ ಪಾಪಮ್ಮ ಅವರು ತಮ್ಮ ಮಗಳ ವಿದ್ಯಾಭ್ಯಾಸಕ್ಕೆ ಹೆಗಲಾಗಿದ್ದಾರೆ. ಮಲ್ಲೆ ಹರವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಗ್ರಾಮವಾಗಿದ್ದು, ಕರಡಿ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಆವಾಸ ಸ್ಥಾನವಾಗಿದೆ. ಇಂಥ ಗ್ರಾಮದ ವಿದ್ಯಾರ್ಥಿನಿ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/molakalmuru-laborer-s-daughter-krishnaveni-sslc-scored-97-percents-rav/articleshow-r3b29sz"/>
        </item>
        <item>
            <title><![CDATA[Pocso case: ಶಾಲಾ ಬಾಲಕಿ ಮೇಲೆ ಬಲತ್ಕಾರ ಪ್ರಕರಣ, ಕಾಮುಕ ಶಿಕ್ಷಕ ರಾಜಣ್ಣ ಅರೆಸ್ಟ್, ಗರ್ಭಪಾತ ಮಾಡಿದ್ದ ವೈದ್ಯೆ ನಾಪತ್ತೆ]]></title>
            <link>https://kannada.asianetnews.com/karnataka-districts/chitradurga-pocso-case-teacher-rajanna-arrested-doctor-who-performed-abortion-escape-rav/articleshow-wmpdwe1</link>
            <guid isPermaLink="true">https://kannada.asianetnews.com/karnataka-districts/chitradurga-pocso-case-teacher-rajanna-arrested-doctor-who-performed-abortion-escape-rav/articleshow-wmpdwe1</guid>
            <pubDate>Sun, 12 Apr 2026 08:20:38 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ಶಾಲಾ ಬಾಲಕಿಯ ಮೇಲೆ ನಿರಂತರ ಅತ್ಯಾ೧ಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಶಿಕ್ಷಕ ಎಚ್.ಒ. ರಾಜಣ್ಣನನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆತ್ಮಹತ್ಯೆಗೆ ಯತ್ನಿಸಿದ್ದ ಈತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಕೃತ್ಯಕ್ಕೆ ಸಹಕರಿಸಿದ ವೈದ್ಯೆ ನಾಪತ್ತೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knzsddjqa96m93fsran3r6z9,imgname-----------------------2026-04-12t074552.239-1775962076759.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ (ಏ.11): &lt;/strong&gt;ಶಾಲಾ ಬಾಲಕಿಯ ಮೇಲೆ ನಿರಂತರ ಬಲತ್ಕಾರ ಮತ್ತು ಗರ್ಭಪಾತ ಮಾಡಿಸಿದ ಆರೋಪದಡಿ ಶಿಕ್ಷಕ ಎಚ್.ಒ. ರಾಜಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;h2&gt;ಪ್ರಕರಣ ಮುಚ್ಚಿಹಾಕಲು ಗರ್ಭಪಾತ!&lt;/h2&gt;&lt;p&gt;ಅಪ್ರಾಪ್ತ ಬಾಲಕಿಯನ್ನ ಪುಸಲಾಯಿತಿ ನಿರಂತರ ಬಲತ್ಕಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು ಎನ್ನಲಾಗಿದ್ದು, ಈ ವಿಷಯ ಹೊರಬರದಂತೆ ತಡೆಯಲು ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ವಿಷಯ ಕುಟುಂಬಸ್ಥರಿಗೆ ತಿಳಿದು ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಪ್ರಕರಣ ಒಂದೊಂದೇ ಬಯಲಾಗಿವೆ.&lt;/p&gt;&lt;h3&gt;ಪ್ರಕರಣ ಬಯಲಾಗಿದ್ದಕ್ಕೆ ಆರೋಪಿ ಸಾಯಲು ಯತ್ನ&lt;/h3&gt;&lt;p&gt;ಏಪ್ರಿಲ್ 9ರಂದು ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಬಂಧನದ ಭೀತಿಯಿಂದ ಶಿಕ್ಷಕ ರಾಜಣ್ಣ ವಿಷ ಸೇವಿಸಿ ಆತ್ಮ೧ಹತ್ಯೆಗೆ ಯತ್ನಿಸಿದ್ದನು. ಕೂಡಲೇ ಈತನನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗುತ್ತಿದ್ದಂತೆ, ನಿನ್ನೆ ಸಂಜೆ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.&lt;/p&gt;&lt;p&gt;&lt;strong&gt;ಗರ್ಭಪಾತ ಮಾಡಿದ್ದ ವೈದ್ಯೆ ನಾಪತ್ತೆ&lt;/strong&gt;&lt;/p&gt;&lt;p&gt;ಆರೋಪಿ ಶಿಕ್ಷಕ ಹೇಳಿದಂತೆ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿರುವ ಶ್ರೀ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಬಂಧನ ಭೀತಿಯಿಂದ ಸದ್ಯ ನಾಪತ್ತೆಯಾಗಿದ್ದಾರೆ. ಪೊಲೀಸರು ವೈದ್ಯೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಘಟನೆ ಬೆನ್ನಲ್ಲೇ ಸರ್ಕಾರಿ ಶಾಲೆಗೆ ಡಿಡಿಪಿಐ ಭೇಟಿ&lt;/strong&gt;&lt;/p&gt;&lt;p&gt;ಶಾಲಾ ಶಿಕ್ಷಕನಿಂದಲೇ ಬಾಲಕಿ ಮೇಲೆ ನಿರಂತರ ಬಲತ್ಕಾರ, ಗರ್ಭಪಾತ ಮಾಡಿಸಿದ ಪ್ರಕರಣ ಜಿಲ್ಲೆಯಾದ್ಯಂತ ಹರಿದಾಡಿದ ಘಟನೆ ಬೆನ್ನಲ್ಲೇ ಜಿಲ್ಲಾ ಆರೋಗ್ಯಧಿಕಾರಿ ರೇಣುಪ್ರಸಾದ್ ಹಾಗೂ ತಹಸೀಲ್ದಾರ್ ರೆಹನ್ ಪಾಷಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಡಿಡಿಪಿಐ ಎಂ.ಆರ್. ಮಂಜುನಾಥ್ ಅವರು ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಆರೋಪಿ ಶಿಕ್ಷಕ ಅಮಾನತು&lt;/strong&gt;&lt;/p&gt;&lt;p&gt;ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಬಂಧನಕ್ಕೊಳಗಾಗಿರುವ ಶಿಕ್ಷಕ ಎಚ್.ಒ. ರಾಜಣ್ಣನನ್ನು ಸೇವೆಯಿಂದ ಅಮಾನತುಗೊಳಿಸಿ ಡಿಡಿಪಿಐ ಮಂಜುನಾಥ್ ಅವರು ಆದೇಶ ಹೊರಡಿಸಿದ್ದಾರೆ.&lt;/p&gt;]]></content:encoded>
            <category>chitradurga</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/chitradurga-pocso-case-teacher-rajanna-arrested-doctor-who-performed-abortion-escape-rav/articleshow-wmpdwe1"/>
        </item>
        <item>
            <title><![CDATA[ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!]]></title>
            <link>https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u</link>
            <guid isPermaLink="true">https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u</guid>
            <pubDate>Wed, 15 Apr 2026 19:03:43 +0530</pubDate>
            <description><![CDATA[ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp8mt9frrnbjm9dk83grq8cz,imgname-dcre-cpi-raghunath-passed-away-1776259245560.jpg" type="image/jpeg" height="390" width="690"/>
            <content:encoded><![CDATA[ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ.&lt;img&gt;&lt;p&gt;&lt;strong&gt;ವಿಜಯನಗರ (ಏ.15): ವಿ&lt;/strong&gt;ಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;&lt;img&gt;&lt;p&gt;ಈ ದುರ್ಘಟನೆಯು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಯ ಗಡಿ ಭಾಗದಲ್ಲಿರುವ ಮುಸ್ಟೂರು ಮತ್ತು ಕಡಬನಕಟ್ಟೆ ಗ್ರಾಮಗಳ ಮಧ್ಯೆ ಸಂಭವಿಸಿದೆ. ಸಿಪಿಐ ರಘುನಾಥ್ ಅವರು ಚಿತ್ರದುರ್ಗ ಜಿಲ್ಲೆಯಿಂದ ಹೊಸಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಹಠಾತ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬೇವಿನ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಘುನಾಥ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ಮೃತ ರಘುನಾಥ್ ಅವರು ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್&zwnj;ಇ (DCRE) ಘಟಕದ ಸಿಪಿಐ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿಶೇಷವೆಂದರೆ, ಕೇವಲ ಮೊನ್ನೆಯಷ್ಟೇ ಅವರು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆಯಾಗಿದ್ದರು. ಬೆಂಗಳೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸಿದ್ಧತೆ ನಡೆಸುತ್ತಿದ್ದ ಅವರು, ಇನ್ನೂ ಅಧಿಕೃತವಾಗಿ ವರದಿ ಮಾಡಿಕೊಂಡಿರಲಿಲ್ಲ. ಆದರೆ, ಬೆಂಗಳೂರಿಗೆ ತೆರಳುವ ಮೊದಲೇ ವಿಧಿಯಾಟ ಬೇರೆಯೇ ಆಗಿತ್ತು. ವರ್ಗಾವಣೆ ಆದೇಶ ಬಂದ ಎರಡೇ ದಿನಗಳಲ್ಲಿ ಈ ದುರ್ಘಟನೆ ನಡೆದಿರುವುದು ಅವರ ಕುಟುಂಬಸ್ಥರು ಮತ್ತು ಪೊಲೀಸ್ ಇಲಾಖೆಯ ಸಹೋದ್ಯೋಗಿಗಳಲ್ಲಿ ತೀವ್ರ ನೋವುಂಟು ಮಾಡಿದೆ.&lt;/p&gt;&lt;img&gt;&lt;p&gt;ರಘುನಾಥ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರಿನ ತಾಂತ್ರಿಕ ದೋಷ ಅಥವಾ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.&lt;/p&gt;&lt;img&gt;&lt;p&gt;ಚಿತ್ರದುರ್ಗ ಜಿಲ್ಲೆಯ ಮೂಲದವರಾದ ರಘುನಾಥ್ ಅವರು ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಚಿತ್ರದುರ್ಗದಲ್ಲಿರುವ ಅವರ ಮನೆಯಲ್ಲಿ ಶೋಕ ಸಾಗರವೇ ಆವರಿಸಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಿರಿಯ ಅಧಿಕಾರಿಗಳ ಪ್ರಾಣವನ್ನೂ ಉಳಿಸುತ್ತಿಲ್ಲ ಎಂಬುದು ದುರದೃಷ್ಟಕರ ಸಂಗತಿಯಾಗಿದೆ. ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಹೊಸ ಜವಾಬ್ದಾರಿ ವಹಿಸಿಕೊಳ್ಳಬೇಕಿದ್ದ ಅಧಿಕಾರಿಯೊಬ್ಬರು ಹೀಗೆ ಅರ್ಧದಲ್ಲೇ ಬದುಕು ಮುಗಿಸಿರುವುದು ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/vijayanagara-cpi-raghunath-dcre-koppal-dies-in-car-accident-musturu-davanagere-border-sat-x1stp5u"/>
        </item>
        <item>
            <title><![CDATA[ಚಿತ್ರದುರ್ಗ: ಹಳೆ ವೈಷಮ್ಯ ರಾಜಿಗೆ ಒಪ್ಪದ ಯುವಕನನ್ನು ಕಲ್ಲು ಎತ್ತಿ ಹಾಕಿ ಮುಗಿಸಿದ ಮುದುಕಪ್ಪ!]]></title>
            <link>https://kannada.asianetnews.com/karnataka-districts/chitradurga-murder-old-feud-turns-fatal-man-brutally-killed-in-bhimasamudra-camp-gdp/articleshow-y54xzgf</link>
            <guid isPermaLink="true">https://kannada.asianetnews.com/karnataka-districts/chitradurga-murder-old-feud-turns-fatal-man-brutally-killed-in-bhimasamudra-camp-gdp/articleshow-y54xzgf</guid>
            <pubDate>Fri, 27 Mar 2026 16:12:45 +0530</pubDate>
            <description><![CDATA[ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಂತರಾಜ್ ಎಂಬ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ರಾಜಿಗೆ ಒಪ್ಪದಿದ್ದಕ್ಕೆ ಈ ಕೃತ್ಯ ನಡೆದಿದ್ದು, ಪೊಲೀಸರು ಆರೋಪಿ ನರಸಿಂಹಪ್ಪನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmqe2bxdtq418vygkch5x7aj,imgname-chitradurga-murder-1774608002989.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಹಳೆಯ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಭೀಮಸಮುದ್ರ ಕ್ಯಾಂಪ್ ಗ್ರಾಮದ ಕಾಂತರಾಜ್ (35) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅದೇ ಗ್ರಾಮದ ನಿವಾಸಿ ನರಸಿಂಹಪ್ಪ (57) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.&lt;/p&gt;&lt;h2&gt;ಹಳೆಯ ದ್ವೇಷವೇ ಕಾರಣ&lt;/h2&gt;&lt;p&gt;ಪೊಲೀಸ್ ಮಾಹಿತಿಯ ಪ್ರಕಾರ, ಕಾಂತರಾಜ್ ಮತ್ತು ನರಸಿಂಹಪ್ಪ ನಡುವೆ ಹಳೆಯ ವೈಷಮ್ಯವಿತ್ತು. 2020ರಲ್ಲಿ ಇವರಿಬ್ಬರ ನಡುವೆ ಗಲಾಟೆ ನಡೆದಿದ್ದು, ಆ ಸಂದರ್ಭದಲ್ಲಿ ನರಸಿಂಹಪ್ಪ ಮೇಲೆ ಕಾಂತರಾಜ್ ಹಲ್ಲೆ ನಡೆಸಿದ್ದನು. ಈ ಸಂಬಂಧ ನರಸಿಂಹಪ್ಪ ಅವರು ಕಾಂತರಾಜ್ ವಿರುದ್ಧ ದೂರು ದಾಖಲಿಸಿದ್ದರು. ನಂತರ ಈ ಪ್ರಕರಣದಲ್ಲಿ ರಾಜಿ ಮಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನರಸಿಂಹಪ್ಪ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ರಾಜಿಗೆ ಒಪ್ಪುವಂತೆ ಕಾಂತರಾಜ್&zwnj;ಗೆ ₹20 ಸಾವಿರ ಹಣ ನೀಡುವುದಾಗಿ ಹೇಳಿದ್ದರೂ, ಕಾಂತರಾಜ್ ಅದನ್ನು ನಿರಾಕರಿಸಿದ್ದನು.&lt;/p&gt;&lt;h2&gt;ರಾಜಿಗೆ ಒಪ್ಪದಿದ್ದಕ್ಕೆ ಕೊಲೆ&lt;/h2&gt;&lt;p&gt;ರಾಜಿಗೆ ಒಪ್ಪದಿರುವುದರಿಂದ ಇಬ್ಬರ ನಡುವೆ ಮತ್ತೆ ಗಲಾಟೆ ಉಂಟಾಗಿ, ಇದು ಹತ್ಯೆಗೆ ದಾರಿ ಮಾಡಿಕೊಟ್ಟಿದೆ. ನಿನ್ನೆ ಸಂಜೆ ವೇಳೆ ನರಸಿಂಹಪ್ಪ, ಕಾಂತರಾಜ್ ತಲೆಗೆ ಕಲ್ಲಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಕಾಂತರಾಜ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.&lt;/p&gt;&lt;p&gt;ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಒಟ್ಟಾರೆ, ಸಣ್ಣಸಣ್ಣ ವೈಷಮ್ಯಗಳು ಎಂತಹ ಭೀಕರ ಘಟನೆಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆಯಾಗಿದೆ.&lt;/p&gt;]]></content:encoded>
            <category>chitradurga</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/chitradurga-murder-old-feud-turns-fatal-man-brutally-killed-in-bhimasamudra-camp-gdp/articleshow-y54xzgf"/>
        </item>
        <item>
            <title><![CDATA[ನಿರೀಕ್ಷಿಸಿದಷ್ಟು ಅಂಕ ಬಂದಿಲ್ಲ ಅಂತ ಫಸ್ಟ್ ಕ್ಲಾಸಲ್ಲಿ ಪಾಸಾದ ಬಾಲಕಿ ಸಾವಿಗೆ ಶರಣು: ಚಿತ್ರದುರ್ಗದಲ್ಲೇ ಫೇಲಾಗಿದ್ದಕ್ಕೆ ಬಾಲಕ ಸಾವು]]></title>
            <link>https://kannada.asianetnews.com/state/sslc-student-died-after-failing-to-get-expected-marks-despite-passing-first-class/articleshow-zpg85if</link>
            <guid isPermaLink="true">https://kannada.asianetnews.com/state/sslc-student-died-after-failing-to-get-expected-marks-despite-passing-first-class/articleshow-zpg85if</guid>
            <pubDate>Thu, 23 Apr 2026 18:47:56 +0530</pubDate>
            <description><![CDATA[&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದ ಕಾರಣಕ್ಕೆ ಮೈಸೂರಿನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿನಿ ಹಾಗೂ ಚಿತ್ರದುರ್ಗದಲ್ಲಿ ಒಂದು ಅಂಕದಿಂದ ಫೇಲಾದ ವಿದ್ಯಾರ್ಥಿ ಆತ್ಮ*ಹತ್ಯೆಗೆ ಶರಣಾಗಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpx79kex7271e8ctgkjwwny0,imgname-student-suicide-1776949710301.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಮೈಸೂರಲ್ಲಿ ಫಸ್ಟ್ ಕ್ಲಾಸಲ್ಲಿ ಪಾಸಾದ್ರೂ ಬಾಲಕಿ ಸಾವಿಗೆ ಶರಣು&lt;/strong&gt;&lt;/h2&gt;&lt;p&gt;ಮೈಸೂರು: ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಂದಿಲ್ಲ ಅಂತ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದಂತಹ ಬೇಸರದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ16 ವರ್ಷದ ತ್ರಿಶಾಲ ಸಾವಿಗೆ ಶರಣಾದ ವಿದ್ಯಾರ್ಥಿನಿ. ತ್ರಿಶಾಲಾಗೆ ಎಸ್&zwnj;ಎಸ್&zwnj;ಎಲ್&zwnj;ಸಿಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಾರದೇ ಹೋದರೂ ಕೂಡ ಆಕೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಹೆಚ್ಚು ಅಂಕ ಬರಲಿಲ್ಲವೆಂದು ದುಡುಕಿದ ಬಾಲಕಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾಳೆ.&lt;/p&gt;&lt;p&gt;ತ್ರಿಶಾಲಾ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಹಾಗೂ ಸವಿತಾ ದಂಪತಿಯ ಪುತ್ರಿಯಾಗಿದ್ದು, ಒಟ್ಟು 440 ಅಂಕಗಳನ್ನು ಗಳಿಸಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಬಾಲಕಿ ಡಿಸ್ಟಿಂಕ್ಷನ್&zwnj;ನಲ್ಲಿ ಪಾಸಾಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ಕೇವಲ ಫಸ್ಟ್&zwnj;ಕ್ಲಾಸ್ ಮಾರ್ಕ್&zwnj; ಅಷ್ಟೇ ಬಂದಿದೆ ಎಂದು ಆಕೆ ಸಾವಿಗೆ ಶರಣಾಗಿದ್ದಾಳೆ. ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ ಎಂದು ಹೇಳಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಆಕೆ ಸಾವಿಗೆ ಶರಣಾಗಿದ್ದಾಳೆ.&lt;/p&gt;&lt;p&gt;&lt;strong&gt;ಚಿತ್ರದುರ್ಗದಲ್ಲಿ ಬಾಲಕ ಸಾವು&lt;/strong&gt;&lt;/p&gt;&lt;p&gt;ಮತ್ತೊಂದೆಡೆ ಚಿತ್ರದುರ್ಗದಲ್ಲಿ ಎಸ್&zwnj;ಎಸ್&zwnj;ಎಲ್&zwnj; ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿ ಸಾವಿಗೆ ಶರಣಾದಂತಹ ದುಃಖದ ಘಟನೆ ನಡೆದಿದೆ. ಚಿತ್ರದುರ್ಗದ ಹೊರಪೇಟೆಯಲ್ಲಿ ವಾಸವಾಗಿರುವ ಬಾಲಕ ಅಯಾನ್ ಬೇಗ್&zwnj; ಮನೆಯಲ್ಲಿಯೇ ಸಾವಿಗೆ ಶರಣಾಗಿದ್ದಾನೆ. ಚಿತ್ರದುರ್ಗ ನಗರದ ಹೊರಪೇಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬಾಲಕ ಆಯಾನ್ ಇಲ್ಲಿನ ಡಾನ್ ಬೊಸ್ಕೊ ಶಾಲೆಯಲ್ಲಿ ಓದುತ್ತಿದ್ದ. ಆದರೆ ಕೇವಲ ಒಂದೇ ಒಂದು ಅಂಕದಿಂದ ಕನ್ನಡದಲ್ಲಿ ಬಾಲಕ ಫೇಲ್ ಆಗಿದ್ದ ಇದರಿಂದ ನೊಂದು ಬಾಲಕ ಸಾವಿಗೆ ಶರಣಾಗಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಸಾಲಬಾಧೆ: ಮುದ್ದಿನ ಶ್ವಾನಕ್ಕೆ ವಿಷನೀಡಿ ತಾನು ಸಾವಿಗೆ ಶರಣಾದ 33 ವರ್ಷದ ಪ್ರಾಪರ್ಟಿ ಡೀಲರ್&lt;/p&gt;&lt;p&gt;&lt;strong&gt;ಮಕ್ಕಳೇ ಪರೀಕ್ಷೆಯ ಜೀವನವಲ್ಲ: ಸಾವಿಗೆ ಶರಣಾಗದಿರಿ&lt;/strong&gt;&lt;/p&gt;&lt;p&gt;ಕೇವಲ ಪರೀಕ್ಷೆ ಫೇಲಾದವೆಂದು ಮಕ್ಕಳು ಸಾವಿನ ದಾರಿ ಹಿಡಿಯುತ್ತಿರುವುದು ಬೇಸರ ಮೂಡಿಸಿದೆ. ಪರೀಕ್ಷೆ ಜೀವನದ ಒಂದು ಭಾಗವಷ್ಟೇ ಪರೀಕ್ಷೆಯೇ ಜೀವನವಲ್ಲ, ಹಿಂದೆ ಪರೀಕ್ಷೆಯಲ್ಲಿ ಫೇಲಾದ ಅನೇಕರು ಜೀವನದಲ್ಲಿ ಮುಂದೆ ಯಶಸ್ವಿ ವ್ಯಕ್ತಿಗಳಾದ ಹಲವು ನಿದರ್ಶನಗಳಿವೆ. ಹೀಗಾಗಿ ಮಕ್ಕಳೇ ಪರೀಕ್ಷೆಯಲ್ಲಿ ಫೇಲಾಗಿದ್ದೇನೆ, ಕಡಿಮೆ ಅಂಕ ಬಂದಿದೆ ಎಂದು ಸಾವಿಗೆ ಶರಣಾಗದಿರಿ. ನಿಮ್ಮನ್ನು ನಂಬಿ ಬದುಕುವ, ಪೋಷಕರಿಗೆ ನೀವೇ ಪ್ರಪಂಚ. ಅವರನ್ನು ಜೀವನಪೂರ್ತಿ ಕೊರಗುವಂತೆ ಮಾಡದಿರಿ. ಪೋಷಕರು ಅಷ್ಟೇ ಕಡಿಮೆ ಅಂಕ ಬಂತು ಅಥವಾ ಫೇಲಾದರು ಅಂತ ಮಕ್ಕಳಿಗೆ ಹೀಯಾಳಿಸದಿರಿ, ಬೇರೆಯವರೊಂದಿಗೆ ಹೋಲಿಕೆ ಮಾಡದಿರಿ. ಡಿಸ್ಟಿಂಕ್ಷನ್&zwnj;ನಲ್ಲಿ ಪಾಸಾದವರೆಲ್ಲ ಜೀವನದಲ್ಲಿ ಯಶಸ್ವಿಯಾಗಿಲ್ಲ. ಹಾಗೆಯೇ ಫೇಲಾದವರೆಲ್ಲಾ ಬದುಕಿನಲ್ಲಿ ಫೇಲಾಗಿಲ್ಲ, ಮಕ್ಕಳಿಗೆ ಧೈರ್ಯ ಹೇಳಿ&hellip;&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 2ನೇ ಮದುವೆಗೂ ನನಗೆ 'ಕನ್ಯೆ'ಯೇ ಬೇಕು ಎಂದ ವಿಚ್ಛೇದಿತ ಐಐಟಿ ಪದವೀಧರನ ಬೇಡಿಕೆಗೆ ಮ್ಯಾಚ್&zwnj; ಮೇಕರ್ ಗರಂ&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>chitradurga</category>
            <dc:creator>Anusha Kb</dc:creator>
            <atom:link href="https://kannada.asianetnews.com/state/sslc-student-died-after-failing-to-get-expected-marks-despite-passing-first-class/articleshow-zpg85if"/>
        </item>
    </channel>
</rss>
