<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 17 May 2026 20:29:33 +0530</lastBuildDate>
        <atom:link href="https://kannada.asianetnews.com/rss/davanagere" rel="self" type="application/rss+xml"/>
        <item>
            <title><![CDATA[BSY Abhimanotsav: ನಾನು, ಅನಂತ್‌ ಸೈಕಲ್‌ನಲ್ಲಿ ಸುತ್ತಾಡಿ ಪಕ್ಷ ಕಟ್ಟಿದೆವು -ಬಿಎಸ್‌ವೈ]]></title>
            <link>https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa</link>
            <guid isPermaLink="true">https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa</guid>
            <pubDate>Sat, 09 May 2026 04:33:04 +0530</pubDate>
            <description><![CDATA[&lt;p&gt;ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ದಾವಣಗೆರೆಗೆ ಆಗಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾರ್ಯಕ್ರಮದ ನಂತರ ಮಾತನಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಕಟ್ಟಲು ತಾವು ಮತ್ತು ಅನಂತಕುಮಾರ್ ಪಟ್ಟ ಶ್ರಮವನ್ನು ಸ್ಮರಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr4x7jqf4931g8c5v02tw0xf,imgname-----------------------2026-05-09t042551.278-1778281335534.jpg" type="image/jpeg" height="390" width="690"/>
            <content:encoded><![CDATA[&lt;p&gt;- ನಾವಿಬ್ಬರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೆವು&lt;/p&gt;&lt;p&gt;- ನಮ್ಮ ಪರಿಶ್ರಮದಿಂದ ಬಿಜೆಪಿ ಅಧಿಕಾರಿಕ್ಕೆ ಬಂತು&lt;/p&gt;&lt;p&gt;&lt;strong&gt;ದಾವಣಗೆರೆ (ಮೇ.9): &lt;/strong&gt;ಚಿತ್ರದುರ್ಗದಲ್ಲಿ ಮೇ 9ಕ್ಕೆ ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆಯಿದೆ. ಆ ಕಾರ್ಯಕ್ರಮದ ನಂತರ ನಾನು ಮಾತನಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನೋತ್ಸವದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ನಗರದ ಹೊರವಲಯದ ರೆಸಾರ್ಟ್&zwnj;ಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದರು.&lt;/p&gt;&lt;p&gt;ಸೈಕಲ್&zwnj;ನಲ್ಲಿ ನಾನು, ಅನಂತಕುಮಾರ್&zwnj; ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣಕಹಳೆಯ ಎಂಬುದನ್ನು ಕಾದು ನೋಡೋಣ ಎಂದು ಅವರು ತಿಳಿಸಿದರು.&lt;/p&gt;&lt;p&gt;ರೆಸಾರ್ಟ್&zwnj;ಗೆ ಕಾರ್ಯಕರ್ತರು: ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ಸೇರಿದಂತೆ ಇಡೀ ಕುಟುಂಬ ಸದಸ್ಯರು ರೆಸಾರ್ಟ್&zwnj;ಗೆ ಬಂದಿದ್ದರು. ಯಡಿಯೂರಪ್ಪ ಅವರನ್ನು ನೋಡಲು, ಭೇಟಿಯಾಗಲು ಅನೇಕ ಕಾರ್ಯಕರ್ತರು, ಅಭಿಮಾನಿಗಳು ರೆಸಾರ್ಟ್&zwnj;ಗೆ ಆಗಮಿಸಿದ್ದರು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/chitradurga-bsy-abhimanotsav-grand-event-today-yadiyurappa-reacts-at-davanagere-rav/articleshow-0yhukwa"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[Karnataka Hijab controversy: ಭುಗಿಲೆದ್ದ ರಾಜಕೀಯ, 'ಕೇಸರಿ ಅಲೆ'ಗೆ ದಾರಿಯಾಗಲಿದೆಯಾ? ಈಶ್ವರಪ್ಪ ಸ್ಫೋಟಕ ಹೇಳಿಕೆ!]]></title>
            <link>https://kannada.asianetnews.com/karnataka-districts/hijab-controversy-former-minister-ks-eshwarappa-salms-congress-rav/articleshow-6ugedqr</link>
            <guid isPermaLink="true">https://kannada.asianetnews.com/karnataka-districts/hijab-controversy-former-minister-ks-eshwarappa-salms-congress-rav/articleshow-6ugedqr</guid>
            <pubDate>Fri, 15 May 2026 08:09:58 +0530</pubDate>
            <description><![CDATA[&lt;p&gt;ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ರಾಜ್ಯದ ಶೈಕ್ಷಣಿಕ ಸಂಸ್ಥೆಗಳು ಮತ್ತು ವಿಧಾನ ಮಂಡಲ ಕೇಸರಿಮಯವಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಮುಸ್ಲಿಮರ ಓಲೈಕೆಗಾಗಿ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krmqpvvvq6e7erwh8dx6ztq5,imgname-----------------------2026-05-15t080305.608-1778812415866.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ (ಮೇ.15): &lt;/strong&gt;ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್ ತೀರ್ಪನ್ನು ಉಲ್ಲಂಘನೆ ಮಾಡಿದೆ. ಶಾಲಾ-ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಮಾತ್ರವಲ್ಲದೆ ಕರ್ನಾಟಕದ ವಿಧಾನ ಮಂಡಲ ಕೂಡ ಕೇಸರಿಮಯವಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h2&gt;ಅಸಮಾಧಾನಿತ ಮುಸ್ಲಿಮರನ್ನ ತೃಪ್ತಿಪಡಿಸಲು ಕಾಂಗ್ರೆಸ್ ಈ ತಂತ್ರ&lt;/h2&gt;&lt;p&gt;&amp;nbsp;ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಮುಸ್ಲಿಮರನ್ನು ತೃಪ್ತಿಪಡಿಸಲು ಕಾಂಗ್ರೆಸ್&zwnj; ಸರ್ಕಾರ ಈ ನಿರ್ಧಾರ ಮಾಡಿದೆ. ಬಿಜೆಪಿ ಸರ್ಕಾರದ ಸಮವಸ್ತ್ರ ನೀತಿಯನ್ನು ಹೈಕೋರ್ಟ್ ಸ್ವಾಗತಿಸಿತ್ತು. ಆದರೆ ಕಾಂಗ್ರೆಸ್&zwnj; ಸರ್ಕಾರ ಮುಸ್ಲಿಮರ ಓಲೈಕೆಗಾಗಿ ನ್ಯಾಯಾಂಗದ ಆದೇಶವನ್ನು ಉಲ್ಲಂಘಿಸಿದ್ದು, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಸದಾ ಮಾತನಾಡುವ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಈಗ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.&lt;/p&gt;&lt;h3&gt;ಇದೇನಾ ಸರ್ವ ಜನಾಂಗದ ಶಾಂತಿಯ ತೋಟ?&lt;/h3&gt;&lt;p&gt;ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳುತ್ತಲೇ, ಶಾಂತವಾಗಿರುವ ರಾಜ್ಯದಲ್ಲಿ ಹಿಂದೂ-ಮುಸ್ಲಿಂ ನಡುವೆ ಗೊಂದಲ ಸೃಷ್ಟಿಸಿ ಕೋಮು ಘರ್ಷಣೆಗೆ ಪ್ರಚೋದನೆ ನೀಡುತ್ತಿದ್ದಾರೆ. ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಕೈಬಿಟ್ಟು ಹೈಕೋರ್ಟ್ ಆದೇಶ ಮುಂದುವರೆಸಬೇಕು. ಇಲ್ಲದಿದ್ದರೆ ಹಿಂದೂ ಸಮಾಜ ಜಾಗೃತಗೊಂಡು ರಾಜ್ಯದಲ್ಲಿ ಮತ್ತೆ ಕೇಸರಿಮಯ ಸರ್ಕಾರ ಬರಲಿದೆ ಎಂದು ಗುಡುಗಿದರು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hijab-controversy-former-minister-ks-eshwarappa-salms-congress-rav/articleshow-6ugedqr"/>
        </item>
        <item>
            <title><![CDATA[ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!]]></title>
            <link>https://kannada.asianetnews.com/politics/davanagere-by-election-counting-strong-room-locks-missing-officials-break-open-amid-tight-security-gdp/articleshow-8e35n73</link>
            <guid isPermaLink="true">https://kannada.asianetnews.com/politics/davanagere-by-election-counting-strong-room-locks-missing-officials-break-open-amid-tight-security-gdp/articleshow-8e35n73</guid>
            <pubDate>Mon, 04 May 2026 08:22:48 +0530</pubDate>
            <description><![CDATA[ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಪ್ರಕ್ರಿಯೆ ಆರಂಭಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kqrecb4sfct3t68nh5065g95,imgname-davanagere-by-election-1777863109785.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಅದರ ಆರಂಭದಲ್ಲೇ ಸ್ಟ್ರಾಂಗ್ ರೂಮ್ ತೆರೆಯುವ ಸಂದರ್ಭದಲ್ಲಿ &amp;nbsp;ಬೀಗಗಳು ಕಾಣೆಯಾದ ಪ್ರಸಂಗ ನಡೆಯಿತು. ಭದ್ರತಾ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾದ ಸ್ಟ್ರಾಂಗ್ ರೂಮ್&zwnj;ಗಳ ಬೀಗಗಳು ನಾಪತ್ತೆಯಾಗಿರುವ ಹಿನ್ನೆಲೆ, ಅಧಿಕಾರಿಗಳು &amp;nbsp;ಕೆಲಕಾಲ ಗೊಂದಲಕ್ಕೆ ಒಳಗಾದ ಪರಿಸ್ಥಿತಿ ನಿರ್ಮಾಣವಾಯ್ತು.&lt;/p&gt;&lt;p&gt;ದಾವಣಗೆರೆಯ ಡಿಆರ್&zwnj;ಆರ್ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ನಿಯಮಾವಳಿಗಳ ಪ್ರಕಾರ ಸ್ಟ್ರಾಂಗ್ ರೂಮ್&zwnj;ಗಳನ್ನು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳ ಏಜೆಂಟ್&zwnj;ಗಳ ಸಮ್ಮುಖದಲ್ಲಿ ತೆರೆಯುವ ಪ್ರಕ್ರಿಯೆ ಆರಂಭಿಸಲಾಯಿತು. ಈ ವೇಳೆ ನಾಲ್ಕು ಸ್ಟ್ರಾಂಗ್ ರೂಮ್&zwnj;ಗಳ ಪೈಕಿ ಕೆಲವು ಕೊಠಡಿಗಳ ಬೀಗಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.&lt;/p&gt;&lt;h2&gt;ಹೊಂದಾಣಿಕೆಯಾಗದ ಲಾಕ್ ಮೆಕಾನಿಸಮ್&lt;/h2&gt;&lt;p&gt;ಚುನಾವಣಾಧಿಕಾರಿಗಳ ಬಳಿಯಲ್ಲಿದ್ದ ಕೀಲಿಗಳನ್ನು ಬಳಸಿಕೊಂಡು ಬೀಗ ತೆರೆಯಲು ಪ್ರಯತ್ನಿಸಿದರೂ, ಡಬಲ್ ಲಾಕರ್ ವ್ಯವಸ್ಥೆಯ ಕಾರಣದಿಂದ ಬೀಗಗಳು ತೆರೆಯಲಾಗಲಿಲ್ಲ. ಸ್ಟೆಪ್-ಬೈ-ಸ್ಟೆಪ್ ವಿಧಾನದಲ್ಲಿ ಕೀಗಳನ್ನು ಬಳಸಬೇಕಾಗಿದ್ದರೂ, ಬೀಗದ ಕೈ (ಲಾಕ್ ಮೆಕಾನಿಸಮ್) ಹೊಂದಾಣಿಕೆಯಾಗದ ಕಾರಣ ಬೀಗ ತೆರೆಯುವುದು ಸಾಧ್ಯವಾಗಲಿಲ್ಲ.&lt;/p&gt;&lt;p&gt;ಇದರಿಂದಾಗಿ ಅಧಿಕಾರಿಗಳು ಪರ್ಯಾಯ ಕ್ರಮವಾಗಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆಯಲು ಮುಂದಾದರು. ನಾಲ್ಕು ಸ್ಟ್ರಾಂಗ್ ರೂಮ್&zwnj;ಗಳ ಪೈಕಿ ಕನಿಷ್ಠ ಎರಡು ಕೊಠಡಿಗಳ ಬೀಗಗಳನ್ನು ಮುರಿದು ತೆರೆಯಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆ ವೇಳೆ ಸಿಬ್ಬಂದಿ ಹರಸಾಹಸ ಪಟ್ಟು ಕಾರ್ಯ ನಿರ್ವಹಿಸಿದರು.&lt;/p&gt;&lt;h2&gt;ಸ್ಟ್ರಾಂಗ್ ರೂಮ್ ತೆರೆಯುವ ಕಾರ್ಯ ಪೂರ್ಣಗೊಂಡ ನಂತರ ಅಂಚೆ ಮತಗಳ ಎಣಿಕೆ&lt;/h2&gt;&lt;p&gt;ಸ್ಟ್ರಾಂಗ್ ರೂಮ್ ತೆರೆಯುವ ಈ ಪ್ರಕ್ರಿಯೆ ಜನರಲ್ ಅಬ್ಸರ್ವರ್ ಕುಮಾರ್ ರಮ್ನಿಕಾಂತ್, ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಚುನಾವಣಾಧಿಕಾರಿ ಸಂತೋಷಕುಮಾರ್ ಅವರ ಸಮ್ಮುಖದಲ್ಲಿ, ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ನಡೆಸಲಾಯಿತು. ಅಭ್ಯರ್ಥಿಗಳ ಏಜೆಂಟ್&zwnj;ಗಳೂ ಈ ವೇಳೆ ಹಾಜರಿದ್ದು, ಸಂಪೂರ್ಣ ಪಾರದರ್ಶಕತೆ ಕಾಪಾಡುವಲ್ಲಿ ಅಧಿಕಾರಿಗಳು ಗಮನ ಹರಿಸಿದರು.&lt;/p&gt;&lt;p&gt;ಸ್ಟ್ರಾಂಗ್ ರೂಮ್ ತೆರೆಯುವ ಕಾರ್ಯ ಪೂರ್ಣಗೊಂಡ ನಂತರ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಇಂತಹ ಅಸಾಧಾರಣ ಪರಿಸ್ಥಿತಿಯ ನಡುವೆಯೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;p&gt;ಈ ಘಟನೆ ದಾವಣಗೆರೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭದ್ರತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಏಳುವ ಸಾಧ್ಯತೆ ಇದೆ. ಆದರೆ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ, ಕಠಿಣ ಭದ್ರತೆಯ ನಡುವೆ ಹಾಗೂ ಅಪ್ರತೀಕ್ಷಿತ ಸವಾಲುಗಳನ್ನು ಎದುರಿಸುತ್ತಾ ದಾವಣಗೆರೆ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಫಲಿತಾಂಶದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/politics/davanagere-by-election-counting-strong-room-locks-missing-officials-break-open-amid-tight-security-gdp/articleshow-8e35n73"/>
        </item>
        <item>
            <title><![CDATA[ತಮಿಳುನಾಡು ನಟ ವಿಜಯ್‌ಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ; ದಾವಣಗೆರೆ ಉಪ ಚುನಾವಣೆ ಬಗ್ಗೆ ಹೇಳಿದ್ದೇನು?]]></title>
            <link>https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu</link>
            <guid isPermaLink="true">https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu</guid>
            <pubDate>Mon, 04 May 2026 11:57:07 +0530</pubDate>
            <description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ರಾಷ್ಟ್ರ ರಾಜಕಾರಣದ ಬಗ್ಗೆಯೂ ಮಾತನಾಡಿದ ಅವರು, ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರಿಗೆ ಗೌರವ ನಮನ ಸಲ್ಲಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kqrtefv5s1tqfpcas8b3zma0,imgname-siddaramaiah-wished-vijay-1777875763045.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ 04): ರಾ&lt;/strong&gt;ಜ್ಯದ ಕುತೂಹಲ ಕೆರಳಿಸಿರುವ ಉಪ ಚುನಾವಣಾ ಫಲಿತಾಂಶದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಉಪ ಚುನಾವಣೆ: ಗೆಲುವಿನ ವಿಶ್ವಾಸ&lt;/strong&gt;&lt;/h3&gt;&lt;p&gt;ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ನಾವು ಮೊದಲಿನಿಂದಲೂ ಈ ಎರಡೂ ಕ್ಷೇತ್ರಗಳ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೆವು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸ್ವಲ್ಪ ಮಟ್ಟಿಗೆ ಮುನ್ನಡೆ ಕಡಿಮೆ ಆಗಿರಬಹುದು, ಆದರೆ ಅಂತಿಮವಾಗಿ ನಾವೇ ಗೆಲುವು ಸಾಧಿಸುತ್ತೇವೆ. ಇನ್ನು ಬಾಗಲಕೋಟೆಯಲ್ಲಿ ನಾವು ಸ್ಪಷ್ಟವಾಗಿ ಗೆಲುವಿನ ಹಾದಿಯಲ್ಲಿದ್ದೇವೆ. ಒಟ್ಟಾರೆಯಾಗಿ ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ' ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ರಾಷ್ಟ್ರ ರಾಜಕಾರಣ ಮತ್ತು ನಟ ವಿಜಯ್&zwnj;ಗೆ ಅಭಿನಂದನೆ&lt;/strong&gt;&lt;/h2&gt;&lt;p&gt;ಇದೇ ಸಂದರ್ಭದಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿರುವ ನಟ ವಿಜಯ್ ಅವರಿಗೆ ಸಿಎಂ ಅಭಿನಂದನೆ ಸಲ್ಲಿಸಿದರು. ಇತರೆ ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಿದ ಅವರು, 'ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇತ್ತು ಎನಿಸುತ್ತಿದೆ. ಅಸ್ಸಾಂನಲ್ಲಿ ನಾವು ನಿರೀಕ್ಷೆ ಮಾಡಿದಂತೆಯೇ ಫಲಿತಾಂಶ ಬಂದಿದೆ. ಆದರೆ ಕೇರಳದಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆದ್ದಿರುವುದು ನಮಗೆ ಸಮಾಧಾನ ತಂದಿದೆ' ಎಂದರು.&lt;/p&gt;&lt;h3&gt;&lt;strong&gt;ಪ್ರಥಮ ಸಿಎಂ ಕೆ.ಸಿ. ರೆಡ್ಡಿ ಅವರಿಗೆ ಗೌರವ ನಮನ&lt;/strong&gt;&lt;/h3&gt;&lt;p&gt;ಇಂದು ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ, ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.&lt;/p&gt;&lt;p&gt;ಬಳಿಕ ಕೆ.ಸಿ. ರೆಡ್ಡಿ ಅವರ ಆಡಳಿತವನ್ನು ಸ್ಮರಿಸಿದ ಸಿಎಂ, 'ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಕೆ.ಸಿ. ರೆಡ್ಡಿ ಅವರು ಸಮರ್ಥ ಆಡಳಿತ ನೀಡಿದ್ದರು. ಅವರೊಬ್ಬ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿ. ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಅವರು ಹಾಕಿಕೊಟ್ಟ ಬುನಾದಿ ಅಪಾರ. ಹಲವಾರು ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ರಾಜ್ಯದ ಪ್ರಗತಿಗೆ ಶ್ರಮಿಸಿದ ಅವರ ಹೆಜ್ಜೆಗಳು ಇಂದಿಗೂ ನಮಗೆ ದಾರಿದೀಪವಾಗಿವೆ. ಅವರ ನೆನಪನ್ನು ಶಾಶ್ವತವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ನಿರಂತರವಾಗಿ ಮಾಡುತ್ತಿದೆ' ಎಂದು ಗುಣಗಾನ ಮಾಡಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಒಟ್ಟಾರೆಯಾಗಿ ಒಂದು ಕಡೆ ಚುನಾವಣಾ ರಾಜಕೀಯದ ಚದುರಂಗದಾಟ, ಇನ್ನೊಂದು ಕಡೆ ರಾಜ್ಯದ ನಿರ್ಮಾತೃಗಳ ಸ್ಮರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಸಕ್ರಿಯವಾಗಿ ಕಾಣಿಸಿಕೊಂಡರು.&lt;/p&gt;]]></content:encoded>
            <category>davanagere</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/cm-siddaramaiah-on-by-election-results-and-wished-to-tamil-nadu-winner-tvk-party-vijay-josef-sat/articleshow-910nbgu"/>
        </item>
        <item>
            <title><![CDATA[ಕೈ ಪಾಳಯದಲ್ಲೀಗ ಉಪಸಮರ ಲಾಭ, ನಷ್ಟದ ಲೆಕ್ಕಾಚಾರ ಶುರು - ಸಿದ್ದುಗೆ ಬಾಗಲಕೋಟೆ, ಡಿಕೆಶಿಗೆ ದಾವಣಗೆರೆ ಮಹತ್ವದ್ದು ಯಾಕೆ ಗೊತ್ತಾ?]]></title>
            <link>https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i</link>
            <guid isPermaLink="true">https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i</guid>
            <pubDate>Mon, 04 May 2026 04:51:54 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶವು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಫಲಿತಾಂಶವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqr2b2ead5jwaeyc7sccnt2g,imgname-----------------------2026-05-04t045055.019-1777850485194.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.4): &lt;/strong&gt;ಪಂಚರಾಜ್ಯ ಚುನಾವಣೆ ಫಲಿತಾಂಶ ಜತೆಗೆ ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶವೂ ಸೋಮವಾರ ಹೊರ ಬೀಳಲಿದೆ. ಫಲಿತಾಂಶ ಹಾಗೂ ಅದರ ಮುಂದುವರೆದ ರಾಜಕೀಯ ಸಮೀಕರಣಗಳ ಕಾರಣಗಳಿಗೆ ಕಾಂಗ್ರೆಸ್&zwnj; ವಲಯದಲ್ಲಿ ಈ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮನೆ ಮಾಡಿದೆ.&lt;/p&gt;&lt;p&gt;ಇತರೆ ಉಪ ಚುನಾವಣೆಗಳಿಗಿಂತ ಈ ಬಾರಿಯ ಉಪ ಚುನಾವಣೆ ಹೆಚ್ಚು ಸದ್ದು ಮಾಡಿತ್ತು. ಮುಸ್ಲಿಂ ಬಾಹುಳ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಂಟಾದ ಟಿಕೆಟ್&zwnj; ತಿಕ್ಕಾಟ ಇದಕ್ಕೆ ಕಾರಣವಾಗಿತ್ತು. ಆದರೆ, ಈ ತಿಕ್ಕಾಟದ ನಡುವೆಯೂ ದಾವಣಗೆರೆ ಕಾಂಗ್ರೆಸ್ ಗೆಲುವು ಖಚಿತ ಎಂಬ ವಿಶ್ವಾಸಕ್ಕೆ ಕೈ ಪಾಳಯ ಬಂದಿದೆ. ಅಲ್ಪಸಂಖ್ಯಾತ ಮತಗಳಲ್ಲಿ ತುಸು ಗೊಂದಲ ಉಂಟಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್&zwnj;ನಿಂದ ವಿಮುಖರಾಗಿಲ್ಲ. ಜತೆಗೆ ಲಿಂಗಾಯತ ಮತಗಳು ಕ್ರೋಢೀಕರಣ ಆಗಿರುವುದರಿಂದ ದಾವಣಗೆರೆ ದಕ್ಷಿಣದಲ್ಲಿ ಭಾರಿ ಬಹುಮತ ಇಲ್ಲದಿದ್ದರೂ ಗೆಲುವಿನ ಭರವಸೆಯಲ್ಲಿ ಕಾಂಗ್ರೆಸ್&zwnj; ಇದೆ.&lt;/p&gt;&lt;p&gt;ಜತೆಗೆ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂಡ ಬೀಡುಬಿಟ್ಟಿದ್ದು ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದು, ಇದು ಕಾಂಗ್ರೆಸ್&zwnj;ಗೆ ಉತ್ತಮ ಮತ ಫಸಲು ನೀಡಿದೆ ಎಂಬ ನಂಬಿಕೆ ಕೈ ಪಾಳಯದಲ್ಲಿದೆ.&lt;/p&gt;&lt;p&gt;ಹೀಗಾಗಿ ಕಾಂಗ್ರೆಸ್ಸಿಗರಿಗೆ ಬಹುಮತದಲ್ಲಿ ವ್ಯತ್ಯಾಸಗಳಿದ್ದರೂ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್&zwnj; ಗೆಲ್ಲುವ ನಂಬಿಕೆಯಿದೆ. ಒಂದೊಮ್ಮೆ ಎರಡೂ ಕ್ಷೇತ್ರ ಸೋತರೆ ಅಧಿಕಾರ ಹಂಚಿಕೆ ಮತ್ತಿತರ ವಿಚಾರಗಳು ಮುನ್ನೆಲೆಗೆ ಬರುವ ಸಾಧ್ಯತೆಯಿದೆ.&lt;/p&gt;&lt;p&gt;ಉಪ ಚುನಾವಣೆಗಳು ಸಾಮಾನ್ಯವಾಗಿ ಅಧಿಕಾರದಲ್ಲಿರುವ ಪಕ್ಷದ ಪರವಾಗಿಯೇ ಇರುವುದು ರೂಢಿ. ಸಂಪನ್ಮೂಲ, ವ್ಯವಸ್ಥೆಯ ಬಲ, ಅನುಕಂಪದ ಲಾಭ ಮತ್ತಿತರ ಕಾರಣಗಳಿಂದ ಈ ಬಾರಿಯ ಉಪ ಚುನಾವಣೆಯಲ್ಲೂ ಆಡಳಿತಾರೂಢ ಕಾಂಗ್ರೆಸ್&zwnj;ಗೆ ಪೂರಕ ವಾತಾವರಣ ಇದೆ ಎಂಬ ಲೆಕ್ಕಾಚಾರ ಇದೆ.&lt;/p&gt;&lt;h2&gt;ಸೋತರೆ ಏನು?:&lt;/h2&gt;&lt;p&gt;ಅಕಸ್ಮಾತ್&zwnj; ಎರಡೂ ಕಡೆ ಸೋತರೆ ಏನಾಗಬಹುದು ಎಂಬ ಲೆಕ್ಕಾಚಾರವೂ ಶುರುವಾಗಿದ್ದು, ಒಂದೊಮ್ಮೆ ಎರಡೂ ಕ್ಷೇತ್ರ ಸೋತರೆ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆಯ ಮುನ್ಸೂಚನೆಯಾಗಿ ಪರಿಗಣಿಸಬಹುದು. ಪ್ರತಿಪಕ್ಷಗಳ ಧ್ವನಿಗೆ ಬಲ ಬರಬಹುದು. ಸರ್ಕಾರ ತಮ್ಮಲ್ಲಿನ ಲೋಪಗಳನ್ನು ಸರಿಪಡಿಸಿಕೊಳ್ಳಲು ಸಮಯಾವಕಾಶ ಇರುವುದರಿಂದ ಸಾರ್ವತ್ರಿಕ ಚುನಾವಣೆ ವೇಳೆಗೆ ಆಗಬೇಕಾದ ಬದಲಾವಣೆಗಳಿಗೆ ಕೈ ಹಾಕಬೇಕಾಗಬಹುದು.&lt;/p&gt;&lt;p&gt;ಎರಡರಲ್ಲಿ ಒಂದು ಸೋತು, ಒಂದು ಗೆದ್ದರೆ ಯಾವ ಕ್ಷೇತ್ರ ಸೋತಿದ್ದಾರೆ ಎಂಬುದರ ಮೇಲೆಯೇ ಫಲಿತಾಂಶದ ಪರಿಣಾಮಗಳ ಲೆಕ್ಕಾಚಾರ ಅವಲಂಬಿಸಲಿದೆ. ದಾವಣಗೆರೆ ದಕ್ಷಿಣ ಸೋತರೆ ಮುಸ್ಲಿಂ ಬಂಡಾಯದ ಕಾರಣ ನೀಡಿ ಚುನಾವಣೆಗೆ ಕೆಲಸ ಮಾಡದ ಮುಸ್ಲಿಂ ನಾಯಕರನ್ನು ಹೊಣೆ ಮಾಡಬಹುದು. ಪ್ರಚಾರಕ್ಕೆ ಸಹಕಾರ ನೀಡದ ಸಚಿವರ ಮೇಲೂ ಕ್ರಮ ಕೈಗೊಳ್ಳಬಹುದು. ಜತೆಗೆ ಇದು ಡಿ.ಕೆ.ಶಿವಕುಮಾರ್&zwnj; ಅವರು ಒತ್ತಾಯದಿಂದ ಕೊಡಿಸಿದ ಟಿಕೆಟ್ ಆಗಿರುವುದರಿಂದ ಅವರಿಗೆ ತುಸು ಹಿನ್ನಡೆ ಉಂಟಾಗಬಹುದು.&lt;/p&gt;&lt;p&gt;ಬಾಗಲಕೋಟೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂಡ ಅಹರ್ನಿಶಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಅವರದ್ದೇ ಸಮುದಾಯದ ಅಭ್ಯರ್ಥಿ ಆಗಿರುವುದಿಂದ ಹಿನ್ನಡೆ ಆಗಲ್ಲ ಎಂಬ ಗಟ್ಟಿ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಬಾಗಲಕೋಟೆ ಸೋತರೆ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಆಗಲಿದೆ.&lt;/p&gt;&lt;p&gt;ಎರಡೂ ಕ್ಷೇತ್ರ ಸೋತರೆ, ನಾಯಕತ್ವ ಬದಲಾವಣೆಯ ಚರ್ಚೆಗೆ ಇಂಬು ದೊರೆಯಬಹುದೇ ಎಂಬ ಕುತೂಹಲವಿದೆ. ಆದರೆ, ನಾಯಕತ್ವ ಬದಲಾವಣೆ ಎಂಬುದು ಉಪಚುನಾವಣೆ ಫಲಿತಾಂಶಕ್ಕಿಂತ ರಾಹುಲ್&zwnj;ಗಾಂಧಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೆಚ್ಚಾಗಿ ಅವಲಂಭಿತ ಎನ್ನುತ್ತಾರೆ ಹಿರಿಯ ಕಾಂಗ್ರೆಸ್ ನಾಯಕರು.&lt;/p&gt;&lt;p&gt;ಅವರು ಪ್ರಕಾರ ರಾಹುಲ್&zwnj;ಗಾಂಧಿ ಅವರು ಈಗಾಗಲೇ ನಾಯಕತ್ವ ಬದಲಾವಣೆ ಮಾಡಲು ಅಥವಾ ಮಾಡದಿರಲು ಸ್ಪಷ್ಟ ನಿಲುವು ತಾಳಿದ್ದರೆ ಅದನ್ನು ಬದಲು ಮಾಡುವಷ್ಟು ಪರಿಣಾಮ ಈ ಚುನಾವಣೆ ಬೀರಲಾರದು. ಈ ಕಾರಣಕ್ಕೆ ಫಲಿತಾಂಶ ಅಧಿಕಾರ ಹಂಚಿಕೆ ವಿಚಾರದಲ್ಲಿ ಗೌಣ ಆಗಲಿದೆ ಎಂಬ ವಿಶ್ಲೇಷಣೆಯೂ ಇದೆ.&lt;/p&gt;&lt;h3&gt;ಕುತೂಹಲ ಮೂಡಿಸಿದ ರಾಹುಲ್&zwnj; ನಡೆ&lt;/h3&gt;&lt;p&gt;ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಮತ್ತಿತರ ವಿಷಯಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್&zwnj; ನೇತೃತ್ವದ ಎರಡೂ ಬಣಗಳು ಪ್ರಯತ್ನಿಸಿದರೂ ರಾಹುಲ್&zwnj;ಗಾಂಧಿ ಅವರ ಯಾರ ಭೇಟಿಗೂ ಸಿಗುತ್ತಿಲ್ಲ.&lt;/p&gt;&lt;p&gt;ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಕುರಿತು ರಾಹುಲ್&zwnj;ಗಾಂಧಿ ಅವರ ಯೋಚನೆ ಏನಿದೆ ಎಂಬುದು ಎಐಸಿಸಿ ಅಧ್ಯಕ್ಷರ ಆದಿಯಾಗಿ ಯಾರಿಗೂ ಸ್ಪಷ್ಟತೆ ಇಲ್ಲ. ಹೀಗಾಗಿ ಕೈ ಪಾಳೆಯದಲ್ಲಿನ ಈ ಬಗೆಗಿನ ಕುತೂಹಲ ಮುಂದುವರೆಯುವ ಸಾಧ್ಯತೆಯಿದೆ.&lt;/p&gt;&lt;p&gt;&lt;strong&gt;ನಾಯಕರ ಮೇಲೇನು ಪರಿಣಾಮ&lt;/strong&gt;&lt;/p&gt;&lt;p&gt;- ಎರಡೂ ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್&zwnj; ಪಾಳಯ&lt;/p&gt;&lt;p&gt;- ದಾವಣಗೆರೆ ಗೆದ್ದರೆ ಡಿಕೆಗೆ ಹಿರಿಮೆ, ಸೋತರೆ ಮುಸ್ಲಿಂ ಬಂಡಾಯ ನಾಯಕರ ತಲೆದಂಡ?&lt;/p&gt;&lt;p&gt;- ಬಾಗಲಕೋಟೆ ಕ್ಷೇತ್ರದಲ್ಲಿ ಸೋತರೆ ಸಿಎಂ ಸಿದ್ದರಾಮಯ್ಯಗೆ ಅಲ್ಪ ಹಿನ್ನಡೆ ಆಗುವ ಸಾಧ್ಯತೆ&lt;/p&gt;&lt;p&gt;- ಎರಡೂ ಕಡೆ ಕಾಂಗ್ರೆಸ್&zwnj; ಸೋತರೆ ನಾಯಕತ್ವ ಬದಲಾವಣೆಗೆ ಚರ್ಚೆಗೆ ಮತ್ತೆ ಇಂಬು ಸಾಧ್ಯತೆ&lt;/p&gt;&lt;p&gt;- ಆದರೆ ನಾಯಕತ್ವದ ಬದಲು ವಿಷಯದಲ್ಲಿ ರಿಸಲ್ಟ್&zwnj;ಗಿಂತ ರಾಹುಲ್&zwnj; ಮನದಾಳವೇ ಅಂತಿಮ&lt;/p&gt;&lt;p&gt;ಕನ್ನಡಪ್ರಭ ವಾರ್ತೆ&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-by-election-results-2026-why-bagalkot-and-davanagere-are-high-stakes-for-siddu-and-dks-rav/articleshow-9620k3i"/>
        </item>
        <item>
            <title><![CDATA[ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?]]></title>
            <link>https://kannada.asianetnews.com/state/karnataka-by-election-results-2026-srinivas-t-dasakariyappa-v-samartha-shamanur-who-will-win-davanagere/articleshow-9g2x5i3</link>
            <guid isPermaLink="true">https://kannada.asianetnews.com/state/karnataka-by-election-results-2026-srinivas-t-dasakariyappa-v-samartha-shamanur-who-will-win-davanagere/articleshow-9g2x5i3</guid>
            <pubDate>Mon, 04 May 2026 06:04:25 +0530</pubDate>
            <description><![CDATA[&lt;p&gt;Karnataka By-Election Results 2026 ದಿವಂಗತ ಶಾಮನೂರು ಶಿವಶಂಕರಪ್ಪ ಇಲ್ಲದೆ ನಡೆಯುತ್ತಿರುವ ಮೊದಲ ದಾವಣಗೆರೆ ದಕ್ಷಿಣ ಉಪಚುನಾವಣೆಯು ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಹೊಸ ಮುಖಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, &amp;nbsp;ಗೆಲುವು ಯಾರಿಗೆಂಬುದರ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkznpgfr260kg5jcmkg4y9xq,imgname-1-1773810696696.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾಗರಾಜ ಎಸ್. ಬಡದಾಳ್&lt;/strong&gt;&lt;/p&gt;&lt;p&gt;&lt;strong&gt;ದಾವಣಗೆರೆ (ಮೇ.4):&lt;/strong&gt; ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಕಾಂಗ್ರೆಸ್ಸಿನ ಭದ್ರಕೋಟೆಯೆಂದೇ ಪ್ರಸಿದ್ಧಿ ಪಡೆದಿದ್ದ, ಹಿರಿಯ ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪ ಇಲ್ಲದ ಮೊದಲ ಉಪ ಚುನಾವಣೆಗೆ ಕಾರಣವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಈ ಬೆನ್ನಲ್ಲೇ ಬಾಜಿ ಕಟ್ಟಿ ಮೀಸೆ ತಿರುವವರ ಸಂಖ್ಯೆಯೂ ಕ್ಷೇತ್ರ, ಜಿಲ್ಲೆಯಲ್ಲಿ ಕಡಿಮೆಯೇನಿಲ್ಲ!&lt;/p&gt;&lt;p&gt;ದಾವಣಗೆರೆ ಲೋಕಸಭಾ ಕ್ಷೇತ್ರದ ಬಹುತೇಕ ವಿಧಾನಸಭಾ ಕ್ಷೇತ್ರಗಳು ಒಮ್ಮೆ ಕಾಂಗ್ರೆಸ್, ಇನ್ನೊಮ್ಮೆ ಬಿಜೆಪಿ ಒಲಿದಿವೆ. ಸಾಂಪ್ರಾದಾಯಿಕ ವೈರಿಗಳಾದ ಕಾಂಗ್ರೆಸ್-ಬಿಜೆಪಿ ಮಧ್ಯೆ ಸ್ಪರ್ಧೆ ಇದ್ದರೆ, ಹರಿಹರ ಕ್ಷೇತ್ರ ಕಾಂಗ್ರೆಸ್- ಬಿಜೆಪಿ- ಜೆಡಿಎಸ್&zwnj; ತ್ರಿಕೋನ ಸ್ಪರ್ಧೆಗೆ ಹೆಸರಾಗಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರ ಮಾತ್ರ ಶಾಮನೂರು ಶಿವಶಂಕರಪ್ಪ ಅವರಿಂದಾಗಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿ, ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾಗಿತ್ತು.&lt;/p&gt;&lt;p&gt;ಬದಲಾದ ಕಾಲಘಟ್ಟದಲ್ಲಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿ ಕಾಯ್ದುಕೊಂಡಿದ್ದ ಅಲ್ಪಸಂಖ್ಯಾತ ಮುಸ್ಲಿಮರು ಮೊದಲ ಸಲ ಟಿಕೆಟ್&zwnj;ಗೆ ಧ್ವನಿ ಎತ್ತಿದ್ದರಿಂದ ಆ ಪಕ್ಷದಲ್ಲೂ ಎರಡು ಗುಂಪುಗಳಾಗಿ, ಸಮುದಾಯದಲ್ಲೂ 3-4 ಗುಂಪುಗಳಾಗಿದ್ದರಿಂದ ಉಪ ಚುನಾವಣೆಯಲ್ಲಿ ಮತಗಳ ವಿಭಜನೆಯಿಂದಾಗಿ ಕಾಂಗ್ರೆಸ್ಸಿಗೆ ಒಂದಿಷ್ಟು ತಲೆನೋವು ತಂದಿದೆ. ಲೋಕಸಭೆ ಚುನಾವಣೆ ವೇಳೆ ಮನೆಯೊಂದು, ಹಲವು ಬಾಗಿಲಂತಾಗಿದ್ದ ಬಿಜೆಪಿಗೆ ಬಂದಿದ್ದ ಸ್ಥಿತಿಯನ್ನೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಿದ್ದು ಸೋಜಿಗ. ಇದರ ಜೊತೆಗೆ ಎಸ್&zwnj;ಡಿಪಿಐ, ಪಕ್ಷೇತರ ಅಭ್ಯರ್ಥಿ ಸಹ ಕಾಂಗ್ರೆಸ್ಸಿಗೆ ತಲೆನೋವು ತಂದಿದ್ದಾರೆ.&lt;/p&gt;&lt;p&gt;ಉಪ ಚುನಾವಣೆ ಕಾರಣಕ್ಕೆ ಮುಸ್ಲಿಮರಿಗೆ, ಅಹಿಂದ ವರ್ಗಕ್ಕೆ ಟಿಕೆಟ್ ಕೊಡುವಂತೆ ಕೇಳಿದ್ದ ಕೆ.ಅಬ್ದುಲ್ ಜಬ್ಬಾರ್&zwnj; ತಲೆದಂಡವಾಗಿದೆ. ಇನ್ನೂ ಆರು ಜನರನ್ನು ಕಾಂಗ್ರೆಸ್ ಜಿಲ್ಲಾ ಸಮಿತಿಯೇ ಉಚ್ಚಾಟನೆಗೆ ಕೆಪಿಸಿಸಿ ಶಿಸ್ತು ಸಮಿತಿಗೆ ಶಿಫಾರಸು ಮಾಡಿದೆ. ಉಪ ಚುನಾವಣೆ ಕಾಂಗ್ರೆಸ್ಸಿಗೆ ಪ್ರತಿಷ್ಟೆಯದ್ದಾಗಿದ್ದು, ಬಿಜೆಪಿ ಇಲ್ಲಿ ಫಲಿತಾಂಶದಿಂದ ಗಳಿಸುವುದು, ಕಳೆದುಕೊಳ್ಳುವುದೇನೂ ಇಲ್ಲ. ಆದರೆ, ದಿಕ್ಕಿಗೆ ಒಬ್ಬರಂತಾಗಿದ್ದ ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿದ್ದು ಈ ಉಪ ಚುನಾವಣೆ. 2028ರ ಉಪ ಚುನಾವಣೆ ಗೆದ್ದರೆ ಬಿಜೆಪಿ ಶಕ್ತಿ ಉದ್ದೀಪನಗೊಳಿಸುವುದು ಸತ್ಯ.&lt;/p&gt;&lt;p&gt;ದಕ್ಷಿಣ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಎರಡೂ ಪ್ರಮುಖ ಪಕ್ಷಗಳಿಂದ ಸ್ಪರ್ಧಿಸಿರುವುದು ಹೊಸ ಮುಖಗಳೇ. ಕಾಂಗ್ರೆಸ್ಸಿನ ಸಮರ್ಥ ಎಂ. ಶಾಮನೂರುಗೆ ರಾಜಕೀಯ ಹೊಸದಲ್ಲ. ಆದರೆ, ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವುದು ಚೊಚ್ಚಲ ಪ್ರಯತ್ನ. ಅದೇ ರೀತಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪಗೂ ರಾಜಕಾರಣ ಹೊಸದಲ್ಲ. ಚುನಾವಣೆ ಕಣಕ್ಕೆ ಇಳಿದಿದ್ದು ಇದೇ ಮೊದಲು. ಹಾಗಾಗಿ, ಸಾಂಪ್ರಾದಾಯಿಕ ವೈರಿಗಳಾದ ಕಾಂಗ್ರೆಸ್- ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದ್ದು, ಎಸ್&zwnj;ಡಿಪಿಐ ಅಭ್ಯರ್ಥಿ, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಹಾಗೂ ಮುಸ್ಲಿಂ ಅಭ್ಯರ್ಥಿಗಳ ಪಡೆಯುವ ಮತಗಳು ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.&lt;/p&gt;&lt;p&gt;ಮೇಲ್ನೋಟಕ್ಕೆ ಕಾಂಗ್ರೆಸ್- ಬಿಜೆಪಿ ಮಧ್ಯೆ ಇದೇ ಮೊದಲ ಬಾರಿಗೆ ಸಮಾನ ಪೈಪೋಟಿಯೆಂಬ ಮಾತು ಕೇಳಿಬರುತ್ತಿವೆ. ಈ ಹಿಂದೆ ಶಾಮನೂರು ಶಿವಶಂಕರಪ್ಪ- ಯಶವಂತ ರಾವ್ ಜಾಧವ್ ಸ್ಪರ್ಧೆ ಮಾಡಿದ್ದಾಗ ಹೇಗೆ ಕೆಲವೇ ಸಾವಿರಗಳ ಮತಗಳ ಅಂತರದಲ್ಲಿ ಫಲಿತಾಂಶ ಬಂದಿತ್ತೋ, ಈ ಉಪ ಚುನಾವಣೆಯಲ್ಲೂ ಅಂತಹದ್ದೇ ಸಾಧ್ಯತೆ ಇವೆ ಎನ್ನಲಾಗಿದೆ. ಉಭಯ ಪಕ್ಷಗಳ ಪೈಕಿ ಯಾರ ಗೆಲುವು ಎಂಬುದನ್ನು ಎಸ್&zwnj;ಡಿಪಿಐ, ಪಕ್ಷೇತರ ಮುಸ್ಲಿಂ ಅಭ್ಯರ್ಥಿಗಳು ಪಡೆದ ಮತಗಳು ನಿರ್ಣಯಿಸುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್ಸಿಗೆ ಹೇಗೆ ಕೆಲವರಿಂದ ವಿರೋಧ ವ್ಯಕ್ತವಾಗಿ ಕಂಡುಬಂದಿತ್ತೋ ಅಂತಹದ್ದು ಮತ ಚಲಾವಣೆ ವೇಳೆ ಇರಲಿಲ್ಲ. ಕಾಂಗ್ರೆಸ್ಸಿಗೆ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲರೂ ಕೈ ಹಿಡಿದಿದ್ದಾರೆಂಬುದು ಕಾಂಗ್ರೆಸ್ಸಿನವರ ಹೇಳಿಕೆ.&lt;/p&gt;&lt;p&gt;ಮತ್ತೊಂದು ಕಡೆ ಬಿಜೆಪಿ ಕಾಂಗ್ರೆಸ್ ಪಾಳೆಯದ ಅತೃಪ್ತಿ, ಮುಸ್ಲಿಂ ಸಮುದಾಯದ ಮುನಿಸಿನ ಲಾಭ ತನಗೆ ಆಗಬಹುದೆಂಬ ನಿರೀಕ್ಷೆಯಲ್ಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಜಾತಿ ಆಟವೂ ಜೋರಾಗಿಯೇ ನಡೆದಿರುವುದು ಕಂಡುಬರುತ್ತಿದೆ. ಎರಡೂ ಅಭ್ಯರ್ಥಿಗಳ ಪರವಾಗಿ ಆಯಾ ಸಮುದಾಯದ ಜಾತಿ ಮತಗಳು, ಅಹಿಂದ ವರ್ಗಗಳ ಮತಗಳು ಸಿಕ್ಕಿವೆಯೆಂದರೆ, ಮುಸ್ಲಿಮರ ಮತ ವಿಭಜನೆ ಆಗಿದೆಯೆಂಬ ವಾದವಿದೆ. ಸದ್ಯಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರ ಫಲಿತಾಂಶವು ಜಿಲ್ಲಾ ಉಸ್ತುವಾರಿ ಸಚಿವ ಎಸ್&zwnj;.ಎಸ್&zwnj;. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಪ್ರತಿಷ್ಟೆಯದ್ದಾಗಿದೆ. ಅದೇ ರೀತಿ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ, ಎಂ.ಪಿ. ರೇಣುಕಾಚಾರ್ಯ ಅವರ ಮಧ್ಯೆ ಇದ್ದ ವೈಮನಸ್ಸು ಮರೆಯಾಗಲು ಬಿಜೆಪಿ ಇಲ್ಲಿ ಗೆಲುವು ಸಾಧಿಸಲೇಬೇಕಿದೆ.&lt;/p&gt;&lt;p&gt;ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಬಿಎಸ್&zwnj;ವೈ ಅಭಿಮಾನೋತ್ಸವ ಮತ್ತಷ್ಟು ರಂಗೇರಬೇಕೆಂದರೆ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕಿದೆ. ಬಿಜೆಪಿಗೆ ಸದಾ ಕಬ್ಬಿಣದ ಕಡಲೆಯಾಗಿದ್ದು, ದಕ್ಷಿಣದಲ್ಲಿ ಸೋಲಿಲ್ಲದ ಸರದಾರನಾಗಿ ಪ್ರತಿನಿಧಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಇಲ್ಲದ ಮೊದಲ ಚುನಾವಣೆಯಲ್ಲಾದರೂ ದಕ್ಷಿಣ ಕ್ಷೇತ್ರದಲ್ಲಿ ಕಮಲ ಅರಳಿಸುವ ಬಿಜೆಪಿ ದಶಕಗಳ ಕನಸಿಗೆ ಇಲ್ಲಿ ಸಾವಿರಾರು ಕಾರ್ಯಕರ್ತರೇ ಶಕ್ತಿಯಾಗಿದ್ದಾರೆ. ಕ್ಷೇತ್ರದ ಮತದಾರರು ಯಾರ ಮುಡಿಗೆ ವಿಜಯಮಾಲೆ ಹಾಕಿದ್ದಾರೆ ಎಂಬುದಕ್ಕೆ ಇನ್ನು ಕೆಲ ತಾಸುಗಳಲ್ಲೇ ಸ್ಪಷ್ಟ ಚಿತ್ರಣವೂ ಸಿಗಲಿದೆ.&lt;/p&gt;&lt;h2&gt;ಬಾಜಿ, ಡಿಸ್ಕೌಂಟ್&zwnj;, ಬೆಟ್ಟಿಂಗ್ ಭರಾಟೆ!&lt;/h2&gt;&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಬಗ್ಗೆ ಎರಡೂ ಪ್ರಮುಖ ಪಕ್ಷಗಳು ಮತ್ತು ಅಭ್ಯರ್ಥಿಗಳ ಬೆಂಬಲಿಗರು ಬಾಜಿ ಕಟ್ಟಿದ್ದಾರೆಂಬ ಮಾತುಕೇಳಿ ಬರುತ್ತಿವೆ. ಇದೊಂದು ಉಪ ಚುನಾವಣೆಯಾಗಿದ್ದು, ಅಂತಹ ಬಾಜಿ ಕಟ್ಟಿ ಮೀಸೆ ತಿರುವುವಂತಹ ಧೈರ್ಯ ಯಾರೂ ಮಾಡಿಲ್ಲ. ಆದರೂ, ಕೆಲವರು ತಮ್ಮ ನಾಯಕರನ್ನು ಮೆಚ್ಚಿಸಲು, ಗಮನ ತಮ್ಮೆಡೆ ಸೆಳೆಯುವುದಕ್ಕೇನೋ ಎಂಬಂತೆ ತಮ್ಮ ಊರಿನಲ್ಲಿ ಅಷ್ಟು ಲಕ್ಷ ಬೆಟ್ ಕಟ್ಟಿದ್ದಾರೆ, ಇಷ್ಟು ಹೊಲ ಪಣಕ್ಕೆ ಇಟ್ಟಿದ್ದಾರೆ ಎಂದೆಲ್ಲಾ ಹೇಳುತ್ತಿದ್ದಾರೆ. ಮತ್ತೆ ಕೆಲವರು ಡಿಸ್ಕೌಂಟ್ ಕೇಳಿ, ತಡರಾತ್ರಿವರೆಗೂ ಕಾಯುತ್ತೇವೆಂಬ ಮಾತುಗಳನ್ನು ಹೇಳಿರುವುದು ಹಳೆ ಭಾಗದಲ್ಲಿ, ಗ್ರಾಮೀಣ ಪ್ರದೇಶದಲ್ಲೂ ಕೇಳಿಬರುತ್ತಿದೆ. ಆದರೆ, ತಮ್ಮ ಅಭ್ಯರ್ಥಿಯೇ ಗೆಲ್ಲುತ್ತಾನೆಂದು ಹೇಳಿಕೊಳ್ಳುವಂತಹ ಧೈರ್ಯ ಯಾವುದೇ ಪಕ್ಷ ತೋರದಿದ್ದರೂ, ದಾವಣಗೆರೆ ದಕ್ಷಿಣ ಕ್ಷೇತ್ರ ಫಲಿತಾಂಶ ಕೆಲವೇ ಸಾವಿರ ಮತಗಳ ಅಂತರದ್ದೆಂಬುದು ಸ್ವತಃ ಉಭಯ ಪಕ್ಷಗಳಿಗೂ ಗೊತ್ತಿರುವ ಸತ್ಯವಾಗಿದೆ.&lt;/p&gt;&lt;p&gt;ದಕ್ಷಿಣ ಕ್ಷೇತ್ರದ ಒಟ್ಟು ಮತದಾನ ಪ್ರಮಾಣ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಏ.9ರಂದು ನಡೆದ ಉಪ ಚುನಾವಣೆಯಲ್ಲಿ ಶೇ.68.55ರಷ್ಟು ಮತದಾನವಾಗಿತ್ತು. ಈ ಪೈಕಿ ಗ್ರಾಮೀಣ ಪ್ರದೇಶದಲ್ಲಿ ಶೇ.84.36ರಷ್ಟು ಹಾಗೂ ನಗರ ಪ್ರದೇಶದಲ್ಲಿ ಶೇ.65.59ರಷ್ಟು ಮತದಾನವಾಗಿತ್ತು. ಇದೀಗ ಮೇ 4ರಂದು ದಾವಣಗೆರೆ ಡಿಆರ್&zwnj;ಆರ್ ಶಾಲೆಯ ಮತ ಎಣಿಕಾ ಕೇಂದ್ರದಲ್ಲಿ ಕ್ಷೇತ್ರ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಡೀ ಜಿಲ್ಲೆ, ರಾಜ್ಯದ ಗಮನವನ್ನು ದಿವಂಗತ ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಸೆಳೆದಿದೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-by-election-results-2026-srinivas-t-dasakariyappa-v-samartha-shamanur-who-will-win-davanagere/articleshow-9g2x5i3"/>
        </item>
        <item>
            <title><![CDATA[NEET UG 2026 : ಇಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ; ರಾಜ್ಯದಲ್ಲಿ ಹೇಗಿದೆ ಸಿದ್ಧತೆ?]]></title>
            <link>https://kannada.asianetnews.com/state/neet-exam-today-prohibitory-order-issued-rav/articleshow-afbqrg8</link>
            <guid isPermaLink="true">https://kannada.asianetnews.com/state/neet-exam-today-prohibitory-order-issued-rav/articleshow-afbqrg8</guid>
            <pubDate>Sun, 03 May 2026 06:32:41 +0530</pubDate>
            <description><![CDATA[ಶಿವಮೊಗ್ಗ ಮತ್ತು ವಿಜಯಪುರದಲ್ಲಿ ನಡೆಯಲಿರುವ ನೀಟ್-ಯುಜಿ 2026 ಪರೀಕ್ಷೆಗೆ ಜಿಲ್ಲಾಡಳಿತಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪಾರದರ್ಶಕ ಮತ್ತು ಸುಸೂತ್ರ ಪರೀಕ್ಷೆಗಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqnnhfv7fs8c5dpv3x6agkp7,imgname-----------------------2026-05-03t062849.326-1777769955175.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಮೊಗ್ಗ ವಿಜಯಪುರ:&lt;/strong&gt; ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರ) ಎನ್. ಹೇಮಂತ್ ತಿಳಿಸಿದರು.&lt;/p&gt;&lt;p&gt;ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.&lt;/p&gt;&lt;p&gt;ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.&lt;/p&gt;&lt;p&gt;ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್&zwnj;ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದರು.&lt;/p&gt;&lt;p&gt;ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.&lt;/p&gt;&lt;h2&gt;ಇಂದು ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ&lt;/h2&gt;&lt;p&gt;&lt;strong&gt;ವಿಜಯಪುರ&lt;/strong&gt;: ನಗರದ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯು ಇಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್&zwnj;ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಗ್ಗೆ 9.30ರಿಂದ ಪರೀಕ್ಷೆ ಮುಕ್ತಾಯವಾಗುವ ವರೆಗೆ ತೆರೆಯದಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/neet-exam-today-prohibitory-order-issued-rav/articleshow-afbqrg8"/>
        </item>
        <item>
            <title><![CDATA[ದಾವಣಗೆರೆಯಲ್ಲಿ ಸಮರ್ಥ ಶಾಮನೂರು ಬಹುತೇಕ ಗೆಲುವು: ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ, ಬಿಜೆಪಿ ಪಾಳಯದಲ್ಲಿ ಕಣ್ಣೀರು!]]></title>
            <link>https://kannada.asianetnews.com/politics/davangere-south-by-election-results-samarth-shamanur-leads-bjp-allegations-sat/articleshow-bxgw2il</link>
            <guid isPermaLink="true">https://kannada.asianetnews.com/politics/davangere-south-by-election-results-samarth-shamanur-leads-bjp-allegations-sat/articleshow-bxgw2il</guid>
            <pubDate>Mon, 04 May 2026 14:44:35 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಭರ್ಜರಿ ಮುನ್ನಡೆ ಸಾಧಿಸಿ ಗೆಲುವಿನ ಸನಿಹದಲ್ಲಿದ್ದಾರೆ. ಕೆಲವು ಇವಿಎಂಗಳಲ್ಲಿ ತಾಂತ್ರಿಕ ದೋಷ ಹಿನ್ನೆಲೆ ವಿವಿಪ್ಯಾಟ್ ಮತಗಲ ಎಣಿಕೆ ಮಾಡಲಾಗುತ್ತದೆ. ಬಿಜೆಪಿ ಹಣಬಲದ ಆರೋಪ ಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqs443b9kfb09n5yjw98ksw9,imgname-davangere-samarth-mallikarjun-1777885908328.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ 04): ರಾ&lt;/strong&gt;ಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ. 20ನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಸಮರ್ಥ ಶಾಮನೂರು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ಕಾಂಗ್ರೆಸ್ ಮುನ್ನಡೆ ಮತ್ತು ಜೈಕಾರ:&lt;/strong&gt;&lt;/h3&gt;&lt;p&gt;19ನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ ಸಮರ್ಥ ಶಾಮನೂರು ಅವರು 5,826 ಮತಗಳ ಮುನ್ನಡೆ ಸಾಧಿಸಿದ್ದರು. ಆದರೆ 20ನೇ ಸುತ್ತು ಮುಕ್ತಾಯವಾಗುವಷ್ಟರಲ್ಲಿ ಈ ಮುನ್ನಡೆಯ ಅಂತರ 7,900ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 10,000 ಮತಗಳ ಎಣಿಕೆ ಬಾಕಿ ಇದ್ದು, ಸಮರ್ಥ ಶಾಮನೂರು ಅವರ ಗೆಲುವು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಕಾಂಗ್ರೆಸ್ ಏಜೆಂಟ್&zwnj;ಗಳು ಸಮರ್ಥ ಶಾಮನೂರು ಪರವಾಗಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ತಾಂತ್ರಿಕ ಸಮಸ್ಯೆ ಮತ್ತು ವಿವಿಪ್ಯಾಟ್ ಸ್ಲಿಪ್ ಎಣಿಕೆ:&lt;/strong&gt;&lt;/h2&gt;&lt;p&gt;ಮತ ಎಣಿಕೆಯ ನಡುವೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ನಾಲ್ಕು ಬೂತ್&zwnj;ಗಳ ಇವಿಎಂ (EVM) ಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಅವುಗಳ ಮತ ಎಣಿಕೆ ಬಾಕಿ ಉಳಿದಿದೆ. ಎಲ್ಲಾ ಸುತ್ತಿನ ಮತ ಎಣಿಕೆ ಮುಗಿದ ಬಳಿಕ ಈ ನಾಲ್ಕು ಬೂತ್&zwnj;ಗಳ ವಿವಿಪ್ಯಾಟ್ (VVPAT) ಸ್ಲಿಪ್&zwnj;ಗಳನ್ನು ಎಣಿಕೆ ಮಾಡಿ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h3&gt;&lt;strong&gt;ಬಿಜೆಪಿ ಅಭ್ಯರ್ಥಿ ಬೆಂಬಲಿಗರಿಂದ ಕಣ್ಣೀರು ಮತ್ತು ಆರೋಪ:&lt;/strong&gt;&lt;/h3&gt;&lt;p&gt;ಇನ್ನೊಂದೆಡೆ, ಬಿಜೆಪಿಯ ಸೋಲು ಖಚಿತವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಗಂಗಾಧರ ಅವರ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ಗಂಗಾಧರಪ್ಪ, 'ಕಾಂಗ್ರೆಸ್ ಅಭ್ಯರ್ಥಿ ಮೋಸ ಮತ್ತು ಹಣಬಲದಿಂದ ಗೆಲುವು ಸಾಧಿಸಿದ್ದಾರೆ'ಎಂದು ಆರೋಪಿಸುತ್ತಾ ಭಾವುಕರಾದರು. ಅಲ್ಲದೆ, '2028ರ ಚುನಾವಣೆಯಲ್ಲಿ ಮತ್ತೊಮ್ಮೆ ಶ್ರೀನಿವಾಸ್ ದಾಸ್ ಕರಿಯಪ್ಪನವರನ್ನು ನಿಲ್ಲಿಸಿ, ಅವರನ್ನು ಭರ್ಜರಿಯಾಗಿ ಗೆಲ್ಲಿಸಿ ಮಂತ್ರಿಯನ್ನಾಗಿ ಮಾಡುತ್ತೇವೆ'ಎಂದು ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಶಪಥ ಮಾಡಿದರು.&lt;/p&gt;&lt;h2&gt;&lt;strong&gt;ಎಸ್&zwnj;ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪ್ರತಿಕ್ರಿಯೆ:&lt;/strong&gt;&lt;/h2&gt;&lt;p&gt;ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಗಳಿಸಿದ ಎಸ್&zwnj;ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರು 17 ಸಾವಿರಕ್ಕೂ ಹೆಚ್ಚು ಮತ ನೀಡಿದ ದಾವಣಗೆರೆ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. 'ಲ್ಕು ಬೂತ್&zwnj;ಗಳ ಎಣಿಕೆ ಬಾಕಿ ಇರುವುದು ಫಲಿತಾಂಶದ ಮೇಲೆ ಪ್ರಭಾವ ಬೀರಬಹುದು. ನಾನು ಈಗ ದಾವಣಗೆರೆಗೆ ನನ್ನ ಮನೆಯನ್ನು ಶಿಫ್ಟ್ ಮಾಡಿದ್ದೇನೆ, ಈ ಭಾಗದ ಜನರ ಜೊತೆ ಸದಾ ಇರುತ್ತೇನೆ'ಎಂದು ತಿಳಿಸಿದರು.&lt;/p&gt;&lt;p&gt;ಒಟ್ಟಾರೆಯಾಗಿ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯೋತ್ಸವಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಬಿಜೆಪಿ ಸೋಲಿನ ಹತಾಶೆಯಲ್ಲಿದೆ. ಅಂತಿಮವಾಗಿ ವಿವಿಪ್ಯಾಟ್ ಎಣಿಕೆಯ ನಂತರ ಅಧಿಕೃತ ಗೆಲುವಿನ ಅಂತರ ಹೊರಬೀಳಲಿದೆ.&lt;/p&gt;]]></content:encoded>
            <category>davanagere</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/davangere-south-by-election-results-samarth-shamanur-leads-bjp-allegations-sat/articleshow-bxgw2il"/>
        </item>
        <item>
            <title><![CDATA[ದಾವಣಗೆರೆ ದಕ್ಷಿಣದಲ್ಲಿ 5,708 ಮತಗಳ ಅಂತರದಿಂದ ಸಮರ್ಥ ಶಾಮನೂರು! ಒಟ್ಟು ಮತ ಗಳಿಸಿದ್ದೆಷ್ಟು ಗೊತ್ತಾ?]]></title>
            <link>https://kannada.asianetnews.com/politics/davangere-south-election-results-samarth-shamanur-wins-congress-victory-sat/articleshow-eb88qk6</link>
            <guid isPermaLink="true">https://kannada.asianetnews.com/politics/davangere-south-election-results-samarth-shamanur-wins-congress-victory-sat/articleshow-eb88qk6</guid>
            <pubDate>Mon, 04 May 2026 17:10:45 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ್ ದಾಸ್ ಕರಿಯಪ್ಪ ಅವರನ್ನು ಸೋಲಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqschy8tdmhjb1y6n5060q8x,imgname-davangere-samarth-mallikarjun--2--1777894750490.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ 04): ಅ&lt;/strong&gt;ತ್ಯಂತ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಭರ್ಜರಿ ಜಯಭೇರಿ ಬಾರಿಸಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಚುನಾವಣೆಯಲ್ಲಿ ಸಮರ್ಥ ಶಾಮನೂರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ್ ದಾಸ್ ಕರಿಯಪ್ಪ ಅವರನ್ನು ಸೋಲಿಸುವ ಮೂಲಕ ವಿಧಾನಸಭೆಗೆ ಪ್ರವೇಶಿಸಿದ್ದಾರೆ.&lt;/p&gt;&lt;h3&gt;&lt;strong&gt;ಅಂತಿಮ ಅಂಕಿ-ಅಂಶಗಳು (24ನೇ ಸುತ್ತಿನ ಅಂತ್ಯಕ್ಕೆ):&lt;/strong&gt;&lt;/h3&gt;&lt;p&gt;ಮತ ಎಣಿಕೆಯ 24ನೇ ಸುತ್ತಿನ ಅಂಕಿ-ಅಂಶಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಒಟ್ಟು 5,708 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.&lt;/p&gt;&lt;p&gt;&lt;strong&gt;ಸಮರ್ಥ ಶಾಮನೂರು (ಕಾಂಗ್ರೆಸ್): &lt;/strong&gt;69,578 ಮತಗಳು&lt;/p&gt;&lt;p&gt;&lt;strong&gt;ಶ್ರೀನಿವಾಸ್ ದಾಸ್ ಕರಿಯಪ್ಪ (ಬಿಜೆಪಿ): &lt;/strong&gt;63,870 ಮತಗಳು&lt;/p&gt;&lt;p&gt;&lt;strong&gt;ಅಫ್ಸರ್ ಕೊಡ್ಲಿಪೇಟೆ (ಎಸ್&zwnj;ಡಿಪಿಐ):&lt;/strong&gt; 18,975 ಮತಗಳು&lt;/p&gt;&lt;h2&gt;&lt;strong&gt;ಮತ ಎಣಿಕೆ ಪ್ರಕ್ರಿಯೆ:&lt;/strong&gt;&lt;/h2&gt;&lt;p&gt;ಈ ಚುನಾವಣೆಯ ಮತ ಎಣಿಕೆಯು ಒಟ್ಟು 21 ಸುತ್ತುಗಳಲ್ಲಿ ನಡೆಯಿತು. ಇವಿಎಂ (EVM) ಮತಗಳ ಎಣಿಕೆಯ ಜೊತೆಗೆ, ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದ 3 ಬೂತ್&zwnj;ಗಳ ವಿವಿ ಪ್ಯಾಟ್ (VVPAT) ಸ್ಲಿಪ್&zwnj;ಗಳ ಎಣಿಕೆಯನ್ನು ಕೂಡ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು. ಎಲ್ಲಾ ಸುತ್ತುಗಳ ಮುಕ್ತಾಯದ ನಂತರ ಸಮರ್ಥ ಶಾಮನೂರು ಅವರು ಸ್ಪಷ್ಟ ಮುನ್ನಡೆ ಕಾಯ್ದುಕೊಂಡು ವಿಜಯದ ನಗೆ ಬೀರಿದ್ದಾರೆ.&lt;/p&gt;&lt;h3&gt;&lt;strong&gt;ಎಸ್&zwnj;ಡಿಪಿಐ ಪ್ರಭಾವ:&lt;/strong&gt;&lt;/h3&gt;&lt;p&gt;ಈ ಚುನಾವಣೆಯಲ್ಲಿ ಎಸ್&zwnj;ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರು 18,975 ಮತಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಎಸ್&zwnj;ಡಿಪಿಐ ಪಡೆದ ಈ ಮತಗಳು ಎರಡೂ ಪ್ರಮುಖ ಪಕ್ಷಗಳ ಮೇಲೆ ಪ್ರಭಾವ ಬೀರಿದ್ದರೂ, ಅಂತಿಮವಾಗಿ ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಮರ್ಥ ಶಾಮನೂರು ಅವರು ಆರಂಭಿಕ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡಿದ್ದರು, ಕೊನೆಯ ಸುತ್ತಿನವರೆಗೂ ಈ ಮುನ್ನಡೆ ಮುಂದುವರಿಯಿತು.&lt;/p&gt;&lt;h3&gt;&lt;strong&gt;ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು:&lt;/strong&gt;&lt;/h3&gt;&lt;p&gt;ಸಮರ್ಥ ಶಾಮನೂರು ಅವರ ಗೆಲುವು ಘೋಷಣೆಯಾಗುತ್ತಿದ್ದಂತೆಯೇ ದಾವಣಗೆರೆ ನಗರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್ ಎರಚುವ ಮೂಲಕ ವಿಜಯೋತ್ಸವ ಆಚರಿಸುತ್ತಿದ್ದಾರೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಾಗಿರುವ ಸಮರ್ಥ ಅವರ ಈ ಗೆಲುವು ಜಿಲ್ಲೆಯ ರಾಜಕಾರಣದಲ್ಲಿ ಶಾಮನೂರು ಕುಟುಂಬದ ಹಿಡಿತವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.&lt;/p&gt;&lt;h3&gt;&lt;strong&gt;ಬಿಜೆಪಿಗೆ ನಿರಾಸೆ:&lt;/strong&gt;&lt;/h3&gt;&lt;p&gt;ಮತ್ತೊಂದೆಡೆ, ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಈ ಫಲಿತಾಂಶ ನಿರಾಸೆ ತಂದಿದೆ. ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಪ್ರಬಲ ಪೈಪೋಟಿ ನೀಡಿದರೂ ಸಹ, ಗೆಲುವಿನ ದಡ ತಲುಪಲು ಸಾಧ್ಯವಾಗಲಿಲ್ಲ. ಹಣಬಲ ಮತ್ತು ಆಡಳಿತ ಯಂತ್ರದ ದುರುಪಯೋಗದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪಿಸಿದ್ದಾರೆ. ಒಟ್ಟಾರೆಯಾಗಿ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 'ಕೈ' ಕಲಿಗಳ ಆರ್ಭಟ ಜೋರಾಗಿದ್ದು, ಸಮರ್ಥ ಶಾಮನೂರು ಅವರ ರೂಪದಲ್ಲಿ ಕಾಂಗ್ರೆಸ್&zwnj;ಗೆ ಹೊಸ ಯುವ ನಾಯಕತ್ವ ಸಿಕ್ಕಂತಾಗಿದೆ.&lt;/p&gt;]]></content:encoded>
            <category>davanagere</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/politics/davangere-south-election-results-samarth-shamanur-wins-congress-victory-sat/articleshow-eb88qk6"/>
        </item>
        <item>
            <title><![CDATA[ಖಾತೆ ಬದಲಾವಣೆಗೆ ಲಂಚದ ಆರೋಪ, ದಾವಣಗೆರೆ ಪಾಲಿಕೆ ಕಚೇರಿಯಲ್ಲಿ ಲೋಕಾಯುಕ್ತರ ತೀವ್ರ ಶೋಧ!]]></title>
            <link>https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq</link>
            <guid isPermaLink="true">https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq</guid>
            <pubDate>Thu, 07 May 2026 15:52:13 +0530</pubDate>
            <description><![CDATA[ದಾವಣಗೆರೆ ಮಹಾನಗರ ಪಾಲಿಕೆಯ ವಲಯ ಕಚೇರಿ-1 ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇಸ್ವತ್ತು ಮತ್ತು ಖಾತೆ ಬದಲಾವಣೆಗೆ ಲಂಚ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr0z671r41jnqe50saee1mcq,imgname-davanagere-lokayukta-raid-1778149170232.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಮಹಾನಗರ ಪಾಲಿಕೆಯಲ್ಲಿನ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ ಘಟನೆ ನಗರದಲ್ಲಿ ಚರ್ಚೆಗೆ ಕಾರಣವಾಗಿದೆ. ಇಸ್ವತ್ತು (e-swathu) ಹಾಗೂ ಖಾತೆ ಬದಲಾವಣೆಯಂತಹ ಸೇವೆಗಳಿಗಾಗಿ ಸಾರ್ವಜನಿಕರಿಂದ ಅನಧಿಕೃತವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.&lt;/p&gt;&lt;h2&gt;8ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ&lt;/h2&gt;&lt;p&gt;ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಇರುವ ಮಹಾನಗರ ಪಾಲಿಕೆ ವಲಯ ಕಚೇರಿ-1 ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ಸುಮಾರು ಎಂಟುಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಎರಡು ಗಂಟೆಗಳಿಗಿಂತ ಹೆಚ್ಚು ಕಾಲದಿಂದ ದಾಖಲೆಗಳು ಮತ್ತು ಕಚೇರಿ ಕಾರ್ಯಪದ್ಧತಿಯ ಕುರಿತು ತೀವ್ರ ಪರಿಶೀಲನೆ ಮುಂದುವರಿದಿದೆ.&lt;/p&gt;&lt;h2&gt;ಇಸ್ವತ್ತು ಪ್ರಮಾಣಪತ್ರ ಹಾಗೂ ಖಾತೆ ಬದಲಾವಣೆ ವೇಳೆ ಹಣ&lt;/h2&gt;&lt;p&gt;ಸಾರ್ವಜನಿಕರಿಂದ ಬಂದ ದೂರಿನಲ್ಲಿ, ಇಸ್ವತ್ತು ಪ್ರಮಾಣಪತ್ರ ಹಾಗೂ ಖಾತೆ ಬದಲಾವಣೆ ಪ್ರಕ್ರಿಯೆಗೆ ಸಿಬ್ಬಂದಿ ಅನಧಿಕೃತವಾಗಿ ಹಣ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿ, ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;p&gt;ದಾಳಿಯ ವೇಳೆ ಕಚೇರಿಯಲ್ಲಿನ ದಾಖಲೆಗಳು, ಅರ್ಜಿಗಳ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಯಾವುದೇ ಅಕ್ರಮ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.&lt;/p&gt;&lt;p&gt;ಪ್ರಸ್ತುತ ಪರಿಶೀಲನೆ ಮುಂದುವರಿದಿದ್ದು, ದಾಳಿಯ ಪೂರ್ಣ ವರದಿ ನಂತರ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಈ ಘಟನೆ ಮಹಾನಗರ ಪಾಲಿಕೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದ್ದು, ಪಾರದರ್ಶಕತೆಗೆ ಒತ್ತಾಯ ಹೆಚ್ಚಿಸಿದೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/davanagere-lokayukta-raid-bribery-allegations-in-property-and-khata-transfer-services-gdp/articleshow-fgicvzq"/>
        </item>
        <item>
            <title><![CDATA[ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳು ಯಾರ ಮಡಿಲಿಗೆ? - ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಹಣಾಹಣಿ, ಬೆಳಗ್ಗೆ 8ರಿಂದ ಎಣಿಕೆ, 12ರ ವೇಳೆಗೆ ರಿಸಲ್ಟ್‌]]></title>
            <link>https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6</link>
            <guid isPermaLink="true">https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6</guid>
            <pubDate>Mon, 04 May 2026 04:31:59 +0530</pubDate>
            <description><![CDATA[&lt;p&gt;ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಫಲಿತಾಂಶದ ಕುತೂಹಲ ಹೆಚ್ಚಾಗಿದೆ. ಕಾಂಗ್ರೆಸ್&zwnj;ನ ಹಿರಿಯ ನಾಯಕರ ನಿಧನದಿಂದ ತೆರವಾದ ಈ ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knk7qxj2bqj0n5p30x9ftb86,imgname----------------------83--1775540893250.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ/ಬಾಗಲಕೋಟೆ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ಸೋಮವಾರ ನಡೆಯಲಿದೆ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್&zwnj;ನ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್&zwnj;ನ ಎಚ್.ವೈ.ಮೇಟಿ ಅವರ ನಿಧನದಿಂದ ಸ್ಥಾನಗಳು ತೆರವಾಗಿದ್ದು, ಏ.9ರಂದು ಮತದಾನ ನಡೆದಿತ್ತು.&lt;/p&gt;&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ನಗರದ ಡಿ.ಆರ್.ಆರ್.ವಿದ್ಯಾಸಂಸ್ಥೆಯಲ್ಲಿ, ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದ್ದು, 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ.&lt;/p&gt;&lt;p&gt;ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ಕೇಂದ್ರದ ಗೇಟಿನಿಂದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್&zwnj; ಬಂದೋಬಸ್ತ್&zwnj; ಏರ್ಪಡಿಸಲಾಗಿದೆ.&lt;/p&gt;&lt;h2&gt;ಕಾಂಗ್ರೆಸ್&zwnj;-ಬಿಜೆಪಿ ಸಮರ:&lt;/h2&gt;&lt;p&gt;ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್&zwnj; ಹಾಗೂ ಬಿಜೆಪಿ ನಡುವೆ ಬಿಗ್&zwnj; ಫೈಟ್&zwnj; ಏರ್ಪಟ್ಟಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಸೇರಿದಂತೆ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್&zwnj;ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.&lt;/p&gt;&lt;h3&gt;&lsquo;ಕೈ&rsquo;ಗೆ ಎದುರಾದ ಭಿನ್ನಮತ:&lt;/h3&gt;&lt;p&gt;ಕಾಂಗ್ರೆಸ್&zwnj;ಗೆ ಎರಡೂ ಕ್ಷೇತ್ರದಲ್ಲಿ ಭಿನ್ನಮತ ಎದುರಾಗಿತ್ತು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್&zwnj; ಟಿಕೆಟ್&zwnj;ಗೆ ಪಟ್ಟು ಹಿಡಿದಿದ್ದರಿಂದ ಸಮಸ್ಯೆ ಎದುರಾಗಿತ್ತು. ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತ ನಾಯಕರಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಬಳಿಕ, ಕಣದಿಂದ ನಿವೃತ್ತಿಯಾಗಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ಆರಂಭದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡದೆ ಅಂತರ ಕಾಯ್ದುಕೊಂಡಿದ್ದರು. ಅಂತಿಮವಾಗಿ, 14 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಾಂಗ್ರೆಸ್&zwnj;ಗೆ ಬಂಡಾಯವಾಗಿ, ಪಕ್ಷೇತರರಾಗಿ ಕಣದಲ್ಲಿದ್ದಾರೆ.&lt;/p&gt;&lt;p&gt;ಇನ್ನು, ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಮಕ್ಕಳಾದ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ಟಿಕೆಟ್&zwnj;ಗಾಗಿ ತೀವ್ರ ಪೈಪೋಟಿ ಏರ್ಪಟ್ಟು, ಭಿನ್ನಮತಕ್ಕೆ ಕಾರಣವಾಗಿತ್ತು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-bypoll-results-2026-congress-vs-bjp-battle-in-davanagere-and-bagalkot-rav/articleshow-h6t2be6"/>
        </item>
        <item>
            <title><![CDATA[ಭ್ರೂಣಹ*ತ್ಯೆ ತಡೆಗೆ ತಂದ ಭಾಗ್ಯಲಕ್ಷ್ಮಿ ಹೆಣ್ಮಕ್ಕಳ ಭವಿಷ್ಯಕ್ಕೆ ಆಸರೆ: ಸಂಸದ ಬಿ.ವೈ.ರಾಘವೇಂದ್ರ]]></title>
            <link>https://kannada.asianetnews.com/karnataka-districts/by-raghavendra-praises-yediyurappa-irrigation-bhagyalakshmi-scheme-gvd/articleshow-morv5i3</link>
            <guid isPermaLink="true">https://kannada.asianetnews.com/karnataka-districts/by-raghavendra-praises-yediyurappa-irrigation-bhagyalakshmi-scheme-gvd/articleshow-morv5i3</guid>
            <pubDate>Sun, 03 May 2026 21:56:39 +0530</pubDate>
            <description><![CDATA[&lt;p&gt;ಹೆಣ್ಣುಮಕ್ಕಳ ಭ್ರೂಣಹ*ತ್ಯೆ ತಡೆಗೆ ಜಾರಿಗೆ ತಂದ ಭಾಗ್ಯಲಕ್ಷ್ಮಿ ಯೋಜನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಾಮಾಜಿಕ ಕಳಕಳಿ, ಬದ್ಧತೆಗೆ ಸಾಕ್ಷಿಯಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h9x1fr9w5j2yjajyyhb0f741,imgname-dvdv.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.03):&lt;/strong&gt; ರಾಜ್ಯದಲ್ಲಿ ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಯೋಜನೆ ತಲುಪಿಸಿದ ಕೀರ್ತಿ, ಹೆಣ್ಣುಮಕ್ಕಳ ಭ್ರೂಣಹ*ತ್ಯೆ ತಡೆಗೆ ಮತ್ತು ಆ ಹೆಣ್ಣುಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡಲು ಜಾರಿಗೆ ತಂದ ಭಾಗ್ಯಲಕ್ಷ್ಮಿ ಯೋಜನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಾಮಾಜಿಕ ಕಳಕಳಿ, ಬದ್ಧತೆಗೆ ಸಾಕ್ಷಿಯಾಗಿವೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಹೆಣ್ಣುಭ್ರೂಣ ಹತ್ಯೆ ತಡೆಗಾಗಿ, ಹೆಣ್ಣುಮಕ್ಕಳ ಭದ್ರತೆಗಾಗಿ ತಂದ ಭಾಗ್ಯಲಕ್ಷ್ಮೀ ಯೋಜನೆಗೆ ಮೊದಲು ₹10 ಸಾವಿರ ಇದ್ದುದನ್ನು ನಂತರ ₹20 ಸಾವಿರಕ್ಕೆ ಹೆಚ್ಚಿಸಿ, ಆ ಮಗು 18 ವರ್ಷಕ್ಕೆ ಬರುವಷ್ಟರಲ್ಲಿ ₹1.20 ಲಕ್ಷ ಸಿಗುವಂತೆ ಮಾಡಿದ ಧೀಮಂತ ನಾಯಕ ಬಿಎಸ್&zwnj;ವೈ ಎಂದರು.&lt;/p&gt;&lt;p&gt;ರಾಜ್ಯ ರಾಜಕಾರಣದ ಧೃವತಾರೆ, ನೀರಾವರಿ ಕ್ರಾಂತಿಯ ಹರಿಕಾರ ಯಡಿಯೂರಪ್ಪನವರ 50 ವರ್ಷಗಳ ಸಾರ್ಥಕ ಜನಸೇವೆಯ ಗೌರವಾರ್ಥ ಮೇ 9ಕ್ಕೆ ಚಿತ್ರದುರ್ಗದ ಸಮಾವೇಶ ಒಂದು ಗುಂಪಿನ ಶಕ್ತಿ ಪ್ರದರ್ಶನವಲ್ಲ, ಇಡೀ ಸಂಘಟನೆಯ ಒಗ್ಗಟ್ಟಿನ ಸಂಕೇತವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ, ಕೋಟ್ಯಂತರ ರು. ಅನುದಾನ ಒದಗಿಸಿದ್ದು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಂದು ಅವರು ತಿಳಿಸಿದರು.&lt;/p&gt;&lt;p&gt;ಕನಕ ಜಯಂತಿ, ವಾಲ್ಮೀಕಿ ಜಯಂತಿಯಂತಹ ಸಾಂಸ್ಕೃತಿಕ ಆಚರಣೆಗಳಿಗೆ ಒತ್ತು ನೀಡಿ, ಎಲ್ಲ ಸಮುದಾಯಗಳನ್ನೂ ಒಗ್ಗೂಡಿಸುವ ಕೆಲಸ ಯಡಿಯೂರಪ್ಪ ಮಾಡಿದರು. ನಮ್ಮಲ್ಲಿ ಒಗ್ಗಟ್ಟು ಇಲ್ಲದಿದ್ದರೆ ಏನಾಗುತ್ತದೆ ಎಂಬುದಕ್ಕೆ ಹಾಲಿನ ಕೊಳಗಕ್ಕೆ ಎಲ್ಲರೂ ನೀರು ಸುರಿದ ನೀತಿ ಪಾಠದ ಕಥೆಯನ್ನು ಉದಾಹರಿಸಿದ ರಾಘವೇಂದ್ರ, ನಾನೊಬ್ಬ ನೀರು ಹಾಕಿದರೆ ಯಾರಿಗೂ ತಿಳಿಯದೆಂದು ಭಾವಿಸಿದರೆ ಕೊನೆಗೆ ಹಾಲಿನ ಬದಲು ನೀರೇ ಉಳಿಯುತ್ತದಷ್ಟೇ ಎಂದು ಮಾರ್ಮಿಕವಾಗಿ ಹೇಳಿದರು.&lt;/p&gt;&lt;p&gt;ದಾವಣಗೆರೆ ಜನ ಮೋಸ ಮಾಡದೇ ಪ್ರಾಮಾಣಿಕವಾಗಿ ಸಹಕರಿಸುತ್ತಾರೆಂಬ ನಂಬಿಕೆ ಇದೆ. ಪ್ರತಿಯೊಬ್ಬರೂ ತಮ್ಮೊಂದಿಗೆ 50ರಿಂದ 100 ಜನರನ್ನು ಕರೆದುಕೊಂಡು ಬಂದು ಸಭೆ ಯಶಸ್ವಿಗೊಳಿಸಬೇಕು. ಕಾರ್ಯಕ್ರಮಕ್ಕೆ ಬರುವಾಗ ಜನರಿಗಾಗಿ ಕೆಎಸ್&zwnj;ಆರ್&zwnj;ಟಿಸಿ ಬಸ್&zwnj;ಗಳ ಬದಲಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್&zwnj;ಗಳನ್ನು ಬಳಸಿಕೊಳ್ಳಲು ಆಲೋಚಿಸಿ. ಸುಮಾರು 200ಕ್ಕೂ ಹೆಚ್ಚು ಖಾಸಗಿ ಬಸ್&zwnj;, ಸ್ಥಳೀಯ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಿ. ಒಟ್ಟಾರೆ ದಾವಣಗೆರೆ, ಹರಿಹರ, ಶಿವಮೊಗ್ಗ ಮತ್ತು ಚನ್ನಗಿರಿ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಅಭಿಮಾನೋತ್ಸವಕ್ಕೆ ಅಮಿತ್ ಶಾ&lt;/strong&gt;&lt;/h2&gt;&lt;p&gt;ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವರು. ಅಂದು ಮಧ್ಯಾಹ್ನ 12ಕ್ಕೆ ಹೆಲಿಪ್ಯಾಡ್&zwnj;ನಲ್ಲಿ ಹೆಲಿಕಾಫ್ಟರ್&zwnj; ಲ್ಯಾಂಡ್ ಆಗಲಿದ್ದು, 12.15ಕ್ಕೆ ವೇದಿಕೆಗೆ ಅಮಿತ್ ಶಾ ಬರಲಿದ್ದಾರೆ. ತರಳಬಾಳು ಶ್ರೀಗಳು, ಪಂಚ ಪೀಠದ ಶ್ರೀಗಳು, ಕನಕ ಪೀಠದ ಶ್ರೀಗಳು ಮತ್ತು ಮಾದಾರ ಚೆನ್ನಯ್ಯ ಶ್ರೀಗಳು, ವಾಲ್ಮೀಕಿ ಶ್ರೀಗಳು ಸೇರಿದಂತೆ ಅನೇಕ ಮಠಾಧೀಶರು ಭಾಗವಹಿಸಲಿದ್ದಾರೆ. ಬೆಳಗ್ಗೆ 9ರಿಂದ ತಿಂಡಿ ಮತ್ತು 12ರಿಂದ ಊಟದ ವ್ಯವಸ್ಥೆ ಸಂಜೆಯವರೆಗೂ ಇರುತ್ತದೆ. ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರುತ್ತದೆ.&lt;/p&gt;]]></content:encoded>
            <category>davanagere</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/by-raghavendra-praises-yediyurappa-irrigation-bhagyalakshmi-scheme-gvd/articleshow-morv5i3"/>
        </item>
        <item>
            <title><![CDATA[ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ! ಅಲ್ಲಿ ನಡೆದ ಘಟನೆ ಏನು?]]></title>
            <link>https://kannada.asianetnews.com/state/davanagere-mp-dr-prabha-mallikarjun-makes-surprise-visit-to-chigateri-hospital-rav/articleshow-nf6go7u</link>
            <guid isPermaLink="true">https://kannada.asianetnews.com/state/davanagere-mp-dr-prabha-mallikarjun-makes-surprise-visit-to-chigateri-hospital-rav/articleshow-nf6go7u</guid>
            <pubDate>Sun, 17 May 2026 07:23:42 +0530</pubDate>
            <description><![CDATA[ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಾರ್ಡ್&zwnj;ಗಳಲ್ಲಿ ರೋಗಿಗಳ ಆರೋಗ್ಯ ವಿಚಾರಿಸಿ, ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಗುಣಮಟ್ಟದ ಸೇವೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01krsszewr52e3kw1qkk2eq345,imgname-----------------------2026-05-17t071750.019-1778982566808.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.17):&lt;/strong&gt; ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಶನಿವಾರ ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವಾರ್ಡ್&zwnj;ಗಳಲ್ಲಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.&lt;/p&gt;&lt;p&gt;ಆಸ್ಪತ್ರೆಯ ಪ್ರತಿಯೊಂದು ವಾರ್ಡ್&zwnj;ಗೆ ಭೇಟಿ ನೀಡಿದ ಸಂಸದರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಮಾಹಿತಿ ಪಡೆದರು. ಜೊತೆಗೆ ರೋಗಿಗಳ ಸಮಸ್ಯೆಗಳು ಹಾಗೂ ಆಸ್ಪತ್ರೆಯಲ್ಲಿನ ಮೂಲ ಸೌಲಭ್ಯಗಳು, ಸೇವಾವೈಖರಿ ಬಗ್ಗೆ ತಿಳಿದುಕೊಂಡರು.&lt;/p&gt;&lt;p&gt;ಆಸ್ಪತ್ರೆಯಲ್ಲಿ ಸ್ವಚ್ಛತೆ, ಔಷಧಿಗಳ ಲಭ್ಯತೆ, ವೈದ್ಯರು ಹಾಗೂ ಸಿಬ್ಬಂದಿ ಕಾರ್ಯವೈಖರಿ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.&lt;/p&gt;&lt;p&gt;ಸರ್ಕಾರಿ ಆಸ್ಪತ್ರೆಗಳಿಗೆ ಆಗಮಿಸುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನವೀಯ ಸೇವೆ ದೊರಕುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯ ಆಡಳಿತ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು. ಆಸ್ಪತ್ರೆಯ ಕ್ಯಾಂಟೀನ್&zwnj;ಗೆ ಭೇಟಿ ನೀಡಿ, ಸ್ವಚ್ಛತೆ ಪರಿಶೀಲನೆ ನಡೆಸಿದರು.&lt;/p&gt;&lt;p&gt;ಸಂಸದರ ದಿಢೀರ್ ಭೇಟಿ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಚಟುವಟಿಕೆ ಕಂಡುಬಂದಿತು. ರೋಗಿಗಳು ಹಾಗೂ ಸಾರ್ವಜನಿಕರು ಸಂಸದರ ಈ ಪರಿಶೀಲನಾ ಕ್ರಮವನ್ನು ಸ್ವಾಗತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/davanagere-mp-dr-prabha-mallikarjun-makes-surprise-visit-to-chigateri-hospital-rav/articleshow-nf6go7u"/>
        </item>
        <item>
            <title><![CDATA[ಗಂಗಾ-ಪಂಚಮಿ ಮಾತಿಗೆ ಮರುಳಾದ್ರೆ ಸರ್ವಸ್ವವೂ ಉಡೀಸ್; ನಿರ್ಜನ ಪ್ರದೇಶಕ್ಕೆ ಎಂಟ್ರಿಯಾದ್ರೆ ಕ್ಲೋಸ್!]]></title>
            <link>https://kannada.asianetnews.com/gallery/karnataka-districts/davangere-honeytrap-gang-targeting-wealthy-youth-busted-five-people-including-two-women-arrested-mrq-omwxpu0</link>
            <guid isPermaLink="true">https://kannada.asianetnews.com/gallery/karnataka-districts/davangere-honeytrap-gang-targeting-wealthy-youth-busted-five-people-including-two-women-arrested-mrq-omwxpu0</guid>
            <pubDate>Sat, 16 May 2026 12:36:09 +0530</pubDate>
            <description><![CDATA[&lt;p&gt;ಯುವಕರನ್ನೇ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಐವರ ಗ್ಯಾಂಗ್&zwnj; ಅನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳಿಂದ ಪೊಲೀಸರು 10.20 ಲಕ್ಷ ಮೌಲ್ಯದ ಚಿನ್ನ, ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಜಾಲದಿಂದ ಇನ್ನಷ್ಟು ಮಂದಿ ಮೋಸ ಹೋಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqs2sysxmg6wjgrpfxfv9q4,imgname-honeytrap-gang-1778914519001.jpg" type="image/jpeg" height="390" width="690"/>
            <content:encoded><![CDATA[&lt;p&gt;ಯುವಕರನ್ನೇ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಐವರ ಗ್ಯಾಂಗ್&zwnj; ಅನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಐವರು ಆರೋಪಿಗಳಿಂದ ಪೊಲೀಸರು 10.20 ಲಕ್ಷ ಮೌಲ್ಯದ ಚಿನ್ನ, ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಜಾಲದಿಂದ ಇನ್ನಷ್ಟು ಮಂದಿ ಮೋಸ ಹೋಗಿರುವ ಶಂಕೆ ವ್ಯಕ್ತವಾಗಿದೆ.&lt;/p&gt;&lt;img&gt;&lt;p&gt;ದಾವಣಗೆರೆಯಲ್ಲಿ ಆಕ್ಟಿವ್ ಆಗಿದ್ದ ಹನಿಟ್ರ್ಯಾಪ್ ಗ್ಯಾಂಗ್&zwnj;ನ ಐವರು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದು, ಪ್ರಾಥಮಿಕ ತನಿಖೆಯಲ್ಲಿ ಗ್ಯಾಂಗ್&zwnj; ಸದಸ್ಯರ ಅಸಲಿ ಮುಖವಾಡ ಬಯಲಾಗಿದೆ.&lt;/p&gt;&lt;img&gt;&lt;p&gt;ಜಗದೀಶ್ (35), ಗಂಗಾ ಮಲ್ಲೇಶ್ ನಾಯ್ಕ (25), ವೆಂಕಟೇಶ್ (30), ಪಂಚಮಿ (34) ಮತ್ತು ಸುರೇಶ್ ಬಂಧಿತ ಆರೋಪಿಗಳು. ಈ ತಂಡದಲ್ಲಿದ್ದ ಗಂಗಾ ಮತ್ತು ಪಂಚಮಿ ಮೊದಲು ಆರ್ಥಿಕವಾಗಿ ಸದೃಢವಾಗಿರುವ ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದರು. ನಂತರ ನಯವಾದ ಮಾತುಗಳಿಂದ ಯುವಕರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಇತ್ತೀಚೆಗೆ ಪ್ರತಿಷ್ಟಿತ ಮನೆತನದ ಯುವಕನೋರ್ವನ ಪರಿಚಯವನ್ನು ಪಂಚಮಿ ಮಾಡಿಕೊಂಡಿದ್ದಳು. ಯುವಕನ್ನು ಪುಸಲಾಯಿಸಿ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಳು. ಈ ವೇಳೆ ಗಂಗಾ, ಜಗದೀಶ್, ವೆಂಕಟೇಶ್ ಮತ್ತು ಸುರೇಶ್ ದಾಳಿ ನಡೆಸಿದ್ದಾರೆ. ಯುವಕನ ಮೇಲೆ ಹಲ್ಲೆ ನಡೆಸಿ ಆತ ಧರಿಸಿದ ಚಿನ್ನಾಭರಣ, ಆತನಲ್ಲಿದ್ದ ಹಣ ಪಡೆದುಕೊಂಡು ಪರಾರಿಯಾಗಿದ್ದರು.&lt;/p&gt;&lt;img&gt;&lt;p&gt;ಈ ಸಂಬಂಧ ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10.20 ಲಕ್ಷ ರೂಪಾಯಿ ಮೌಲ್ಯದ 80.16ಗ್ರಾಂ ಚಿನ್ನ, 8 ಲಕ್ಷ ರೂ. ಮೌಲ್ಯದ ಇನೋವಾ ಕಾರ್ ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ರೀತಿ ಬೇರೆಯವರಿಗೆ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/davangere-honeytrap-gang-targeting-wealthy-youth-busted-five-people-including-two-women-arrested-mrq-omwxpu0"/>
        </item>
        <item>
            <title><![CDATA[ದಾವಣಗೆರೆ ದಕ್ಷಿಣ: ಅಜ್ಜನ ಗದ್ದುಗೆಗೆ ಮೊಮ್ಮಗನ ಲಗ್ಗೆ! ಕಾಂಗ್ರೆಸ್ ಗೆಲುವಿಗೆ ಕಾರಣವಾದ ಅಂಶಗಳಿವು]]></title>
            <link>https://kannada.asianetnews.com/politics/davanagere-south-bypoll-2026-congress-samarth-shamanur-wins-tight-contest-key-factors-behind-congress-victory-gdp/articleshow-s82hunh</link>
            <guid isPermaLink="true">https://kannada.asianetnews.com/politics/davanagere-south-bypoll-2026-congress-samarth-shamanur-wins-tight-contest-key-factors-behind-congress-victory-gdp/articleshow-s82hunh</guid>
            <pubDate>Mon, 04 May 2026 15:56:45 +0530</pubDate>
            <description><![CDATA[ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು 4,873 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಶಾಮನೂರು ಕುಟುಂಬದ ಮೇಲಿನ ಅನುಕಂಪ, ಲಿಂಗಾಯತ ಮತ್ತು ಕುರುಬ ಸಮುದಾಯದ ಬೆಂಬಲ ಹಾಗೂ ಪ್ರಚಾರ ತಂತ್ರಗಳು ಈ ಗೆಲುವಿಗೆ ಪ್ರಮುಖ ಕಾರಣಗಳಾಗಿವೆ. ಈ ಫಲಿತಾಂಶವು ಕಾಂಗ್ರೆಸ್&zwnj;ಗೆ ಬಲ ನೀಡಿದ್ದು, ಬಿಜೆಪಿ ಆತ್ಮಪರಿಶೀಲನೆಗೆ ದಾರಿ ಮಾಡಿಕೊಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkzrxeesae3hkb72av1m41pk,imgname-samarth-shamanur-1773814069720.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 27 ವರ್ಷದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಕಠಿಣ ಪೈಪೋಟಿಯ ನಡುವೆ ಪ್ರಯಾಸದ ಜಯ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಅಜ್ಜನ ರಾಜಕೀಯ ಗದ್ದುಗೆಗೆ ಮೊಮ್ಮಗ ಉತ್ತರಾಧಿಯಾಗಿದ್ದು, ಶಾಮನೂರು ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.&lt;/p&gt;&lt;h2&gt;ಕಾಂಗ್ರೆಸ್ ಗೆಲುವಿಗೆ ಕಾರಣವಾದ ಅಂಶಗಳು&lt;/h2&gt;&lt;p&gt;ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಹಲವು ರಾಜಕೀಯ ಹಾಗೂ ಸಾಮಾಜಿಕ ಅಂಶಗಳು ಪ್ರಮುಖ ಪಾತ್ರವಹಿಸಿದ್ದವೆಂದು ವಿಶ್ಲೇಷಿಸಲಾಗುತ್ತಿದೆ. ಪ್ರಮುಖವಾಗಿ, ಶಾಮನೂರು ಕುಟುಂಬದ ಮೇಲಿನ ಅನುಕಂಪದ ಅಲೆ ಮತದಾರರಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದು, ಅದು ಕಾಂಗ್ರೆಸ್ ಪರವಾಗಿ ಕೆಲಸ ಮಾಡಿದೆ.&lt;/p&gt;&lt;p&gt;ಗ್ರಾಮೀಣ ಭಾಗದಲ್ಲಿ ಲಿಂಗಾಯತ ಸಮುದಾಯದ ಮತಗಳು ಕಾಂಗ್ರೆಸ್ ಪರವಾಗಿ ತಿರುಗಿರುವುದು ಮತ್ತೊಂದು ಪ್ರಮುಖ ಕಾರಣವಾಗಿದೆ. ಅದೇ ರೀತಿ, ಕುರುಬ ಸಮುದಾಯದ ಮತಗಳಲ್ಲಿ ಯಾವುದೇ ವಿಭಜನೆ ಉಂಟಾಗದೇ, ಅವು ಸಹ ಕಾಂಗ್ರೆಸ್&zwnj;ಗೆ ಅನುಕೂಲಕರವಾಗಿ ಚಲಾವಣೆಯಾಗಿವೆ.&lt;/p&gt;&lt;p&gt;ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಮತಗಳು ಸಹ ಬಹುಮಟ್ಟಿಗೆ ಕಾಂಗ್ರೆಸ್ ಪರವಾಗಿ ಹರಿದಿದ್ದು, ವಿಶೇಷವಾಗಿ ಯುವ ಮತದಾರರನ್ನು ಹೊರತುಪಡಿಸಿದರೆ ಸುಮಾರು 70 ಶೇಕಡಾ ಮತಗಳು ಕಾಂಗ್ರೆಸ್&zwnj;ಗೆ ಲಭಿಸಿದ್ದವೆಂದು ಅಂದಾಜಿಸಲಾಗಿದೆ.&lt;/p&gt;&lt;p&gt;ಇದರ ಜೊತೆಗೆ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೇತೃತ್ವದಲ್ಲಿ ರೂಪಿಸಿದ ಪ್ರಚಾರ ತಂತ್ರ ಹಾಗೂ ರಣಯೋಜನೆಗಳು ಕ್ಷೇತ್ರದಲ್ಲಿ ಪರಿಣಾಮಕಾರಿ ಆಗಿದ್ದವು. ಪ್ರಬಲ ಮುಸ್ಲಿಂ ಅಭ್ಯರ್ಥಿಯಾಗಿದ್ದ ಸಾದಿಕ್ ಫೈಲ್ವಾನ್ ಕಣದಿಂದ ಹಿಂದೆ ಸರಿದಿರುವುದು ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಿಸಿತು.&lt;/p&gt;&lt;h2&gt;ಮತ ಎಣಿಕೆಯ ಫಲಿತಾಂಶ&lt;/h2&gt;&lt;p&gt;21ನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು 68,619 ಮತಗಳನ್ನು ಪಡೆದು 4,873 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ 63,746 ಮತಗಳನ್ನು ಪಡೆದರೆ, ಎಸ್&zwnj;ಡಿಪಿಐ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ 18,485 ಮತಗಳನ್ನು ಗಳಿಸಿದ್ದಾರೆ.&lt;/p&gt;&lt;h2&gt;ರಾಜಕೀಯ ಪ್ರತಿಕ್ರಿಯೆಗಳು&lt;/h2&gt;&lt;p&gt;ಸಮರ್ಥ ಶಾಮನೂರು ಅವರ ಗೆಲುವಿನ ಬೆನ್ನಲ್ಲೇ, ಸಾದಿಕ್ ಫೈಲ್ವಾನ್ ಅವರು ಶಾಮನೂರು ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ನಿರಾಶೆಯಿಂದ ಕಣ್ಣೀರಿಟ್ಟ ಘಟನೆಗಳು ಕಂಡುಬಂದವು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಈ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ, &ldquo;ಹಣಬಲ ಮತ್ತು ಮೋಸದ ಮೂಲಕ ಗೆಲುವು ಸಾಧಿಸಲಾಗಿದೆ&rdquo; ಎಂದು ಆರೋಪಿಸಿದರು. ಇದೇ ವೇಳೆ, ಬಿಜೆಪಿ ಕಾರ್ಯಕರ್ತರು &ldquo;2028ರಲ್ಲಿ ಮತ್ತೊಮ್ಮೆ ಶ್ರೀನಿವಾಸ್ ದಾಸ್ ಕರಿಯಪ್ಪ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿ ಮಂತ್ರಿಯನ್ನಾಗಿ ಮಾಡುತ್ತೇವೆ&rdquo; ಎಂದು ಶಪಥ ಮಾಡಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶವು ಕಾಂಗ್ರೆಸ್ ಪಕ್ಷಕ್ಕೆ ಪ್ರಮುಖ ರಾಜಕೀಯ ಬಲ ನೀಡಿದರೆ, ಬಿಜೆಪಿ ಪಕ್ಷಕ್ಕೆ ಆತ್ಮಪರಿಶೀಲನೆ ಮಾಡುವ ಅಗತ್ಯವನ್ನು ಉಂಟುಮಾಡಿದೆ. ವಿವಿಧ ಸಾಮಾಜಿಕ ಸಮೀಕರಣಗಳು ಹಾಗೂ ರಾಜಕೀಯ ತಂತ್ರಗಳು ಈ ಫಲಿತಾಂಶದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದು, ಮುಂದಿನ ಚುನಾವಣೆಗೆ ದಿಕ್ಕು ತೋರಿಸುವಂತಿದೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/politics/davanagere-south-bypoll-2026-congress-samarth-shamanur-wins-tight-contest-key-factors-behind-congress-victory-gdp/articleshow-s82hunh"/>
        </item>
        <item>
            <title><![CDATA[Davanagere South election live counting: ದಾವಣಗೆರೆಯಲ್ಲಿ ಮತ ಎಣಿಕೆ: ಎರಡನೇ ಸುತ್ತಿನಲ್ಲೂ ಬಿಜೆಪಿ ಅಬ್ಬರ!]]></title>
            <link>https://kannada.asianetnews.com/state/davanagere-south-by-election-results-2026-bjp-candidate-leads-in-the-second-round-of-counting-rav/articleshow-xftvlm4</link>
            <guid isPermaLink="true">https://kannada.asianetnews.com/state/davanagere-south-by-election-results-2026-bjp-candidate-leads-in-the-second-round-of-counting-rav/articleshow-xftvlm4</guid>
            <pubDate>Mon, 04 May 2026 09:44:37 +0530</pubDate>
            <description><![CDATA[ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸ್ಟ್ರಾಂಗ್ ರೂಮ್ ಕೀ ಗೊಂದಲದಿಂದಾಗಿ ಚಿಲಕ ಮುರಿಯುವಂತಾಯಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಮೊದಲ ಸುತ್ತಿನ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಗಿಂತ ಮುನ್ನಡೆ ಸಾಧಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmvnmdn6q8j2ymjhjwvrew88,imgname----------------------77--1774750152358.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.4):&lt;/strong&gt; ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದ್ದು, ಒಟ್ಟು 217 ಅಂಚೆ ಮತಗಳು ಹಾಗೂ 10 ಸೇವಾ ಮತಗಳು ಸೇರಿದಂತೆ ಒಟ್ಟು 227 ಮತಗಳ ಎಣಿಕೆ ಕಾರ್ಯ ಮೊದಲು ಕೈಗೆತ್ತಿಕೊಳ್ಳಲಾಗಿದೆ.&lt;/p&gt;&lt;h2&gt;ಸ್ಟ್ರಾಂಗ್ ರೂಮ್ ಕೀ ಗೊಂದಲ; ಚಿಲಕ ಮುರಿದ ಸಿಬ್ಬಂದಿ!&lt;/h2&gt;&lt;p&gt;ಮತ ಎಣಿಕೆ ಆರಂಭಕ್ಕೂ ಮುನ್ನ ಸ್ಟ್ರಾಂಗ್ ರೂಮ್ ಕೀ ವಿಚಾರದಲ್ಲಿ ಭಾರಿ ಗೊಂದಲ ನಿರ್ಮಾಣವಾಗಿತ್ತು. ಪ್ರತಿಯೊಂದು ಸ್ಟ್ರಾಂಗ್ ರೂಮ್&zwnj;ಗೆ ಎರಡೆರಡು ಅತ್ಯಾಧುನಿಕ ಡಬಲ್ ಲಾಕರ್ ಬೀಗಗಳನ್ನು ಹಾಕಲಾಗಿತ್ತು. ಆದರೆ ಚುನಾವಣಾಧಿಕಾರಿ ಬಳಿಯಿದ್ದ ಕೀಗಳಿಂದ ಬೀಗ ಓಪನ್ ಆಗದ ಹಿನ್ನೆಲೆಯಲ್ಲಿ, ಅನಿವಾರ್ಯವಾಗಿ ನಾಲ್ಕು ಸ್ಟ್ರಾಂಗ್ ರೂಮ್&zwnj;ಗಳ ಚಿಲಕ ಮುರಿದು ಅಧಿಕಾರಿಗಳು ಒಳಪ್ರವೇಶಿಸಿದರು.&lt;/p&gt;&lt;h3&gt;ಶೃಂಗೇರಿ ಮರುಎಣಿಕೆ ಎಫೆಕ್ಟ್ ಎಚ್ಚರಿಕೆಯ ಹೆಜ್ಜೆ&lt;/h3&gt;&lt;p&gt;2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಉಂಟಾಗಿದ್ದ ಗೊಂದಲವನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಅಧಿಕಾರಿಗಳು ಅತೀವ ಎಚ್ಚರಿಕೆ ವಹಿಸಿದ್ದಾರೆ. ತಿರಸ್ಕೃತ ಮತಗಳನ್ನು ಅತ್ಯಂತ ಸೂಕ್ಷ್ಮವಾಗಿ ಬೇರ್ಪಡಿಸಿ, ಅಂಚೆ ಮತಗಳ ಪರಿಶೀಲನೆ ನಡೆಸಲಾಗುತ್ತಿದೆ.&lt;/p&gt;&lt;p&gt;&lt;strong&gt;ದಾವಣಗೆರೆ ದಕ್ಷಿಣ: 14 ಟೇಬಲ್&zwnj;ಗಳಲ್ಲಿ ಇವಿಎಂ ಎಣಿಕೆ&lt;/strong&gt;&lt;/p&gt;&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದ ಇವಿಎಂ ಮತಗಳ ಎಣಿಕೆ ಕೂಡ ಚಾಲನೆ ಪಡೆದಿದ್ದು, ಒಟ್ಟು 14 ಟೇಬಲ್&zwnj;ಗಳಲ್ಲಿ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಟೇಬಲ್&zwnj;ನಲ್ಲೂ ಏಜೆಂಟ್&zwnj;ಗಳ ಸಮ್ಮುಖದಲ್ಲಿ ಬಿಗಿ ಭದ್ರತೆಯೊಂದಿಗೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.&lt;/p&gt;&lt;p&gt;&lt;strong&gt;ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ&lt;/strong&gt;&lt;/p&gt;&lt;p&gt;ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಆರಂಭಿಕ ಟ್ರೆಂಡ್&zwnj;ನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸುತ್ತಿನ ಮತ&zwnj;ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ 730 ಮತಗಳಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆ&lt;/p&gt;&lt;p&gt;&lt;strong&gt;ದಾವಣಗೆರೆ ದಕ್ಷಿಣ: ಮೊದಲ ಸುತ್ತಿನ ಅಧಿಕೃತ ಅಂಕಿ-ಅಂಶ&lt;/strong&gt;&lt;/p&gt;&lt;p&gt;ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳು ಪಡೆದ ಮತಗಳ ವಿವರ ಹೀಗಿದೆ:&lt;/p&gt;&lt;p&gt;&lt;strong&gt;ಬಿಜೆಪಿ&lt;/strong&gt;: 3711&lt;/p&gt;&lt;p&gt;&lt;strong&gt;ಕಾಂಗ್ರೆಸ್&lt;/strong&gt;: 3134&lt;/p&gt;&lt;p&gt;&lt;strong&gt;ಎಸ್ ಡಿಪಿಐ&lt;/strong&gt;: 638&lt;/p&gt;&lt;p&gt;ಒಟ್ಟಿನಲ್ಲಿ ಸದ್ಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಮೊದಲ ಸುತ್ತಿನ ಅಂತ್ಯಕ್ಕೆ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿ ಕೇಸರಿ ಪಾಳಯದಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಮುಂದಿನ ಸುತ್ತಿನ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದೆ.&lt;/p&gt;&lt;p&gt;&lt;strong&gt;ಎರಡನೇ ಸುತ್ತಿನ ಮತ ಎಣಿಕೆಯಲ್ಲೂ ಮುನ್ನಡೆ:&lt;/strong&gt;&lt;/p&gt;&lt;p&gt;2ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ 2777&lt;/p&gt;&lt;ul&gt; &lt;li&gt;ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ 9137 ಮತಗಳು&lt;/li&gt; &lt;li&gt;ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು 6360 ಮತಗಳು&lt;/li&gt; &lt;li&gt;ಎಸ್ ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 1187 ಮತಗಳು&lt;/li&gt;&lt;/ul&gt;]]></content:encoded>
            <category>davanagere</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/davanagere-south-by-election-results-2026-bjp-candidate-leads-in-the-second-round-of-counting-rav/articleshow-xftvlm4"/>
        </item>
        <item>
            <title><![CDATA[ಮಚ್ಚಿನಿಂದ ಕೊಚ್ಚಿ ದಾವಣಗೆರೆಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ]]></title>
            <link>https://kannada.asianetnews.com/karnataka-districts/ex-gram-panchayat-member-hacked-to-death-in-davanagere-police-probe-underway/articleshow-xg57rh0</link>
            <guid isPermaLink="true">https://kannada.asianetnews.com/karnataka-districts/ex-gram-panchayat-member-hacked-to-death-in-davanagere-police-probe-underway/articleshow-xg57rh0</guid>
            <pubDate>Sat, 16 May 2026 08:47:11 +0530</pubDate>
            <description><![CDATA[&lt;p&gt;ಯುವತಿ ವಿಚಾರವಾಗಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಪ್ರಕರಣದಲ್ಲಿ ಯುವತಿ ವಿಚಾರ ಮುನ್ನಲೆಗೆ ಬಂದಿದ್ದು, ಪೊಲೀಸ್ ತನಿಖೆ ಆರಂಭಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kaks678j5ve3ckp96xgg11zz,imgname-ambulance-1763748027666.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.16)&lt;/strong&gt; ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್ ಬಳಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆಯಾಗಿದೆ. ತಡ ರಾತ್ರಿ ಅಪ್ಪ ಹಾಗೂ ಮಗ ಇಬ್ಬರು ಸೇರಿ 43ರ ಹರೆಯದ ಆತಾಉಲ್ಲಾ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಹತ್ಯೆ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಯುವಚಿ ವಿಚಾರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ನಲ್ಲೂರ್ ಕ್ಯಾಂಪ್&zwnj;ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.&lt;/p&gt;&lt;p&gt;ಆತಾಉಲ್ಲಾ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ. ಯುವತಿ ವಿಚಾರವಾಗಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ದಸ್ತಗಿರ್ ಹಾಗೂ ಜಬಿಉಲ್ಲಾ ಹಲವು ಆತಾಉಲ್ಲಾಗೆ ವಾರ್ನಿಂಗ್ ಮಾಡಿದ್ದರು ಎನ್ನಲಾಗಿದೆ. ಯುವತಿ ವಿಚಾರವಾಗಿ ಜಗಳವೂ ನಡೆದಿತ್ತು ಅನ್ನೋ ಮಾತುಗಳು ಕೇಳಿಬಂದಿದೆ. ಎಚ್ಚರಿಕೆ ಬಳಿಕವೂ ಆತಾಉಲ್ಲಾ ತನ್ನ ಬುದ್ದಿ ಬಿಟ್ಟಿರಲಿಲ್ಲ. ಹೀಗಾಗಿ ನಿನ್ನೆ (ಮೇ.15) ತಡ ರಾತ್ರಿ ದಸ್ತಗಿರ್ ಹಾಗೂ ಜಬಿಉಲ್ಲಾ ಇಬ್ಬರು ಸೇರಿ ಮಾರಾಕಾಸ್ತ್ರಗಳ ಮೂಲಕ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.&lt;/p&gt;&lt;h2&gt;ಹಿಂಬದಿಯಿಂದ ಬಂದು ದಾಳಿ&lt;/h2&gt;&lt;p&gt;ನಲ್ಲೂರ್ ಕ್ಯಾಂಪ್ ಬಳಿ ಇರುವ ಬೇಕರಿ ಬಳಿ ಆತಾಉಲ್ಲಾ ನಿಂತಿದ್ದ. ರಾತ್ರಿ ವೇಳೆ ಕೆಲ ಸ್ನೇಹಿತರು, ಆಪ್ತರ ಜೊತೆ ಮಾತುಕತೆ ನಡೆಸಿದ್ದ ಅತಾಉಲ್ಲಾ ಬಳಿಕ ಬೇಕರಿ ಬಳಿ ಬಂದಿು ನಿಂತಿದ್ದ. ಬೇಕರಿಯಿಂದ ಮನೆಗೆ ತೆರಳಲು ಸಿದ್ಧವಾಗುತ್ತಿದ್ದಂತೆ ದಸ್ತಗಿರ್ ಹಾಗೂ ಜಬಿಉಲ್ಲಾ ಹಿಂಬದಿಯಿಂದ ದಾಳಿ ಮಾಡಿದ್ದಾರೆ. ಮಚ್ಚಿನಿಂದ ದಾಳಿ ಮಾಡಿದ್ದಾರೆ, ಭೀಕರ ದಾಳಿಯಲ್ಲಿ ಆತಾಉಲ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಚನ್ನಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>davanagere</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/ex-gram-panchayat-member-hacked-to-death-in-davanagere-police-probe-underway/articleshow-xg57rh0"/>
        </item>
        <item>
            <title><![CDATA[Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?]]></title>
            <link>https://kannada.asianetnews.com/state/davanagere-south-by-election-results-2026-today-is-declared-a-dry-day-due-to-vote-counting-rav/articleshow-yhdtsoe</link>
            <guid isPermaLink="true">https://kannada.asianetnews.com/state/davanagere-south-by-election-results-2026-today-is-declared-a-dry-day-due-to-vote-counting-rav/articleshow-yhdtsoe</guid>
            <pubDate>Mon, 04 May 2026 06:22:35 +0530</pubDate>
            <description><![CDATA[ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ 'ಶುಷ್ಕ ದಿವಸ' ಘೋಷಿಸಲಾಗಿದೆ ಹಾಗೂ ಹಳೆ ಪಿ.ಬಿ. ರಸ್ತೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmvpbfv40xv0pzzzf32xapbp,imgname----------------------78--1774750908260.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಮೇ.4): &lt;/strong&gt;ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 4ರಂದು ನಡೆಯಲಿದ್ದು, ಮುಕ್ತ, ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯ ನಡೆಸಲು ಪೂರಕವಾಗಿ ದಾವಣಗೆರೆ ತಾಲೂಕು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾಗಳಲ್ಲಿ ಹಾಗೂ ಇನ್ನಿತ ರೆ ಸ್ಥಳಗಳಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಿ, &lsquo;ಶುಷ್ಕ ದಿವಸ&rsquo; ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಹಳೆ ಪಿ.ಬಿ. ರಸ್ತೆ ವಾಹನ ಸಂಚಾರ ಮಾರ್ಗ ಬದಲಾವಣೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಮೇ.4ರಂದು ನಗರದ ಹಳೆ ಪಿ.ಬಿ.ರಸ್ತೆಯ ಡಿಆರ್&zwnj;ಆರ್ ಶಾಲೆಯಲ್ಲಿ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಮತ್ತು ಭದ್ರತೆ ದೃಷ್ಟಿಯಿಂದ ಮತ ಎಣಿಕಾ ಕೇಂದ್ರದ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಸಂಚಾರ ನಿಷೇಧ- ಪರ್ಯಾಯ ಮಾರ್ಗ ಮೇ 4ರ ಬೆಳಗ್ಗೆ 5ರಿಂದ ಸಂಜೆ 5ರವರೆಗೆ ಇಲ್ಲಿನ ಹಳೇ ಪಿ.ಬಿ. ರಸ್ತೆಯ ಎಪಿಎಂಸಿ ಫ್ಲೈಓವರ್&zwnj;ನಿಂದ ಡಿಸಿಎಂ ಅಂಡರ್ ಬ್ರಿಡ್ಜ್&zwnj;ವರೆಗೆ ಎಲ್ಲ ಮಾದರಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಬೆಂಗಳೂರು, ಚಿತ್ರದುರ್ಗ ಮಾರ್ಗವಾಗಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಬರುವ ಕೆಎಸ್&zwnj;ಆರ್&zwnj;ಟಿಸಿ, ಖಾಸಗಿ ಬಸ್ಸುಗಳು ಮತ್ತು ಎಲ್ಲ ಭಾರೀ ಹಾಗೂ ಲಘು ಸರಕು ಸಾಗಣೆ ವಾಹನಗಳು ಇಲ್ಲಿನ ಎಪಿಎಂಸಿ ಎತ್ತಿನ ಸಂತೆ ಮುಖಾಂತರ ಎಪಿಎಂಸಿ ಒಳಗಿನ ರಸ್ತೆಯ ಮೂಲಕ ಆರ್&zwnj;.ಎಂ.ಸಿ. ಫ್ಲೈ ಓವರ್&zwnj; ಮಾರ್ಗವಾಗಿ ಶ್ರೀ ಬಸವೇಶ್ವರ ದೇವಸ್ಥಾನ, ಗಣೇಶ ಹೋಟೆಲ್ ಸರ್ಕಲ್ ಹಾಗೂ ಈರುಳ್ಳಿ ಮಾರ್ಕೆಟ್ ಮುಖಾಂತರ ಹಳೇ ಪಿ.ಬಿ. ರಸ್ತೆ ತಲುಪಬೇಕು.&lt;/p&gt;&lt;p&gt;ಭದ್ರತಾ ದೃಷ್ಟಿಯಿಂದ ಮತ ಎಣಿಕಾ ಕೇಂದ್ರಕ್ಕೆ ಬರುವಂತಹ ಚುನಾವಣಾ ಏಜೆಂಟರು ಹಾಗೂ ಮತ ಎಣಿಕಾ ಕೇಂದ್ರಕ್ಕೆ ಬರುವವರು ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಮೊಬೈಲ್ ಫೋನ್&zwnj;ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಆದೇಶ ಹೊರಡಿಸಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/davanagere-south-by-election-results-2026-today-is-declared-a-dry-day-due-to-vote-counting-rav/articleshow-yhdtsoe"/>
        </item>
        <item>
            <title><![CDATA[ಮೈಸೂರು ಬೆಳಗಾವಿ ಎಕ್ಸ್‌ಪ್ರೆಸ್‌ ರೈಲು ಹರಿಹರ ನಿಲ್ದಾಣದಲ್ಲಿ ದುರಂತ, ಯಶಸ್ವಿ ಅಣಕು ಪ್ರದರ್ಶನ]]></title>
            <link>https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93</link>
            <guid isPermaLink="true">https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93</guid>
            <pubDate>Fri, 15 May 2026 15:24:01 +0530</pubDate>
            <description><![CDATA[ಹರಿಹರ ಸಮೀಪ, ಮೈಸೂರು-ಬೆಳಗಾವಿ ಎಕ್ಸ್&zwnj;ಪ್ರೆಸ್&zwnj; ರೈಲು ಹಳಿತಪ್ಪಿದ ಭೀಕರ ಅಪಘಾತದ ಸನ್ನಿವೇಶವನ್ನು ಆಧರಿಸಿ ವಾರ್ಷಿಕ ವಿಪತ್ತು ನಿರ್ವಹಣಾ ಅಣಕು ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಎನ್&zwnj;ಡಿಆರ್&zwnj;ಎಫ್, ಎಸ್&zwnj;ಡಿಆರ್&zwnj;ಎಫ್ ಸೇರಿದಂತೆ ವಿವಿಧ ಇಲಾಖೆಗಳು ಸಂಯೋಜಿತ ಕಾರ್ಯಾಚರಣೆ ನಡೆಸಿ, ಒಂದು ಗಂಟೆಯೊಳಗೆ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದವು.]]></description>
            <media:content url="https://static.asianetnews.com/images/w-1280,h-720,format-jpg,imgid-01krngn59zc93e76anagay5qv0,imgname-railway-disaster-mock-drill-1778838574399.jpg" type="image/jpeg" height="390" width="690"/>
            <content:encoded><![CDATA[&lt;p&gt;ಹರಿಹರ: ಮೈಸೂರು&ndash;ಬೆಳಗಾವಿ ನಡುವೆ ಸಂಚರಿಸುತ್ತಿದ್ದ ಮೈಸೂರು&ndash;ಬೆಳಗಾವಿ ಬೇಸಿಗೆ ವಿಶೇಷ ಸೂಪರ್ ಎಕ್ಸ್&zwnj;ಪ್ರೆಸ್&zwnj; (ರೈಲು ಸಂಖ್ಯೆ 06285) ಹಳಿತಪ್ಪಿದ ಪರಿಣಾಮ ಸಂಭವಿಸುವ ಭೀಕರ ಅಪಘಾತದ ಪರಿಸ್ಥಿತಿಯನ್ನು ಆಧರಿಸಿ, ಹರಿಹರ ಸಮೀಪ ವಾರ್ಷಿಕ ವಿಪತ್ತು ನಿರ್ವಹಣೆಯ ಪೂರ್ಣ ಪ್ರಮಾಣದ ಅಣಕು ಅಭ್ಯಾಸ (ಮಾಕ್&zwnj; ಡ್ರಿಲ್&zwnj;) ಯಶಸ್ವಿಯಾಗಿ ನಡೆಸಲಾಯಿತು.&lt;/p&gt;&lt;h2&gt;ಅಪಘಾತದ ತೀವ್ರತೆ ನೈಜ ಪರಿಸ್ಥಿತಿಗೆ ಸಮಾನ&lt;/h2&gt;&lt;p&gt;ಈ ಅಣಕು ಪ್ರದರ್ಶನದಲ್ಲಿ ಅಪಘಾತದ ತೀವ್ರತೆಯನ್ನು ನೈಜ ಪರಿಸ್ಥಿತಿಗೆ ಸಮಾನವಾಗಿ ಚಿತ್ರಿಸಲಾಯಿತು. ಅಪಘಾತದ ರಭಸಕ್ಕೆ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇನ್ನೊಂದು ಬೋಗಿ ಅದರ ಮೇಲೇರಿದ ಸ್ಥಿತಿಯಲ್ಲಿ ಇದ್ದರೆ, ಮತ್ತೊಂದು ಬೋಗಿ ಗಂಭೀರವಾಗಿ ಜಖಂಗೊಂಡಂತೆ ರೂಪಿಸಲಾಗಿದೆ. ಈ ಸಂದರ್ಭದಲ್ಲಿ ರೈಲ್ವೆ ಸಿಬ್ಬಂದಿ ತಕ್ಷಣ ಸಮೀಪದ ನಿಲ್ದಾಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.&lt;/p&gt;&lt;p&gt;ಮಾಹಿತಿ ತಲುಪುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (ಎನ್&zwnj;ಡಿಆರ್&zwnj;ಎಫ್), ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (ಎಸ್&zwnj;ಡಿಆರ್&zwnj;ಎಫ್), ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತಂಡಗಳು ಕ್ಷಿಪ್ರವಾಗಿ ಸ್ಥಳಕ್ಕೆ ಆಗಮಿಸಿದವು. ಸಂಯೋಜಿತ ಕಾರ್ಯಾಚರಣೆಯ ಮೂಲಕ ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಅವರಿಗೆ ಧೈರ್ಯ ತುಂಬಿ, ಪ್ರಥಮ ಚಿಕಿತ್ಸೆ ನೀಡಿ, ಅಗತ್ಯವಿದ್ದವರನ್ನು ಆಂಬ್ಯುಲೆನ್ಸ್&zwnj;ಗಳ ಮೂಲಕ ಸಮೀಪದ ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಕೇವಲ ಒಂದು ಗಂಟೆಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.&lt;/p&gt;&lt;h2&gt;ಜೀವದ ಹಂಗನ್ನು ಲೆಕ್ಕಿಸದೆ ಪ್ರಯಾಣಿಕರ ರಕ್ಷಣೆ&lt;/h2&gt;&lt;p&gt;ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಗುರುವಾರ ಹರಿಹರ ರೈಲು ನಿಲ್ದಾಣದಲ್ಲಿ ಈ ವಾರ್ಷಿಕ ಅಭ್ಯಾಸ ಆಯೋಜಿಸಲಾಗಿತ್ತು. ಬೆಂಕಿಗಾಹುತಿಯಾದ ಬೋಗಿಗಳೊಳಗೆ ಆಕ್ಸಿಜನ್&zwnj; ಉಪಕರಣಗಳೊಂದಿಗೆ ಪ್ರವೇಶಿಸಿದ ಸಿಬ್ಬಂದಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ಪ್ರಯಾಣಿಕರ ರಕ್ಷಣೆಯಲ್ಲಿ ತೊಡಗಿರುವ ದೃಶ್ಯ ಗಮನಾರ್ಹವಾಗಿತ್ತು. ಪ್ರಯಾಣಿಕರ ಜೀವ ರಕ್ಷಣೆ ಮಾತ್ರವಲ್ಲದೆ, ಅವರ ಬೆಲೆಬಾಳುವ ವಸ್ತುಗಳು ಹಾಗೂ ಸರಂಜಾಮುಗಳನ್ನು ಕೂಡ ಸುರಕ್ಷಿತವಾಗಿ ಹೊರತೆಗೆದು, ಅವುಗಳನ್ನು ಯಾವ ಬೋಗಿಗೆ ಸೇರಿವೆ ಎಂಬುದನ್ನು ಲಿಖಿತವಾಗಿ ದಾಖಲಿಸುವ ಕ್ರಮವೂ ಕೈಗೊಳ್ಳಲಾಯಿತು.&lt;/p&gt;&lt;p&gt;ಇದೇ ವೇಳೆ, ಮೈಸೂರು ವಿಭಾಗದ ಮಿನಿ ರೈಲು ಘಟಕದಿಂದ ಹೆಚ್ಚುವರಿ ಸ್ಟ್ರೆಚರ್&zwnj;ಗಳು, ತುರ್ತು ಚಿಕಿತ್ಸಾ ಸಾಮಗ್ರಿಗಳು ಹಾಗೂ ಲೋಹ ಕತ್ತರಿಸುವ ಯಂತ್ರೋಪಕರಣಗಳನ್ನು ಒದಗಿಸುವ ಮೂಲಕ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು ತಾವು ಸಿದ್ಧರಾಗಿದ್ದೇವೆ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲಾಯಿತು.&lt;/p&gt;&lt;p&gt;ಈ ಸಮಗ್ರ ಅಣಕು ಅಭ್ಯಾಸದ ವೇಳೆ ಸಂವಹನ ವ್ಯವಸ್ಥೆಯ ಪರಿಣಾಮಕಾರಿತ್ವ, ವಿವಿಧ ಇಲಾಖೆಗಳ ನಡುವಿನ ಸಮನ್ವಯ, ರಕ್ಷಣಾ ಕಾರ್ಯಾಚರಣೆಯ ವೇಗ, ವೈದ್ಯಕೀಯ ಸೇವೆಗಳ ಸ್ಪಂದನೆ, ಜನಸಂದಣಿ ನಿಯಂತ್ರಣ ಹಾಗೂ ಪುನಃಸ್ಥಾಪನಾ ಸಿದ್ಧತೆಗಳನ್ನೂ ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಅಭ್ಯಾಸದ ಅಂತ್ಯದಲ್ಲಿ ಸಂಬಂಧಿತ ಅಧಿಕಾರಿಗಳಿಂದ ವಿಮರ್ಶಾ ಸಭೆ ನಡೆಸಿ, ಕಾರ್ಯಾಚರಣೆಯ ವಿವಿಧ ಅಂಶಗಳ ಕುರಿತು ವಿಶ್ಲೇಷಣೆ ಮಾಡಲಾಯಿತು.&lt;/p&gt;&lt;p&gt;ಇಂತಹ ಅಣಕು ಅಭ್ಯಾಸಗಳನ್ನು ರೈಲ್ವೆ ಸಚಿವಾಲಯದ ಮಾರ್ಗಸೂಚಿಗಳಂತೆ ನಿಯಮಿತವಾಗಿ ನಡೆಸಲಾಗುತ್ತಿದ್ದು, ವಿಪತ್ತು ಸಿದ್ಧತೆಯನ್ನು ಬಲಪಡಿಸುವುದರ ಜೊತೆಗೆ ತುರ್ತು ಸಂದರ್ಭಗಳಲ್ಲಿ ವೇಗವಾದ ಮತ್ತು ಸಮನ್ವಯಿತ ಪ್ರತಿಕ್ರಿಯೆಯನ್ನು ಖಚಿತಪಡಿಸುತ್ತದೆ.&lt;/p&gt;&lt;p&gt;ಪೃಥ್ವಿ ಎಸ್ ಹುಲ್ಲತ್ತಿ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ.&lt;/p&gt;&lt;p&gt;ಅಣಕು ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆಯ ಹಿರಿಯ ಅಧಿಕಾರಿಗಳು ಸಮಗ್ರವಾಗಿ ಮೇಲ್ವಿಚಾರಣೆ ಮಾಡಿದರು. ಮೈಸೂರು ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕ ಮುದಿತ್ ಮಿಟ್ಟಲ್, ನೈರುತ್ಯ ರೈಲ್ವೆಯ ಮುಖ್ಯ ಸುರಕ್ಷತಾ ಅಧಿಕಾರಿ ರಾಮಕೃಷ್ಣ, ಹಾಗೂ ಮುಖ್ಯ ಯಾಂತ್ರಿಕ ಎಂಜಿನಿಯರ್ ಬಾಲಸುಂದರ್ ಪಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು, ನಾಗರಿಕ ಆಡಳಿತದ ಪ್ರತಿನಿಧಿಗಳು ಹಾಜರಿದ್ದರು&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mysuru-belagavi-express-railway-disaster-mock-drill-conducted-davanagere-harihar-station-emergency-response-gdp/articleshow-yq0pn93"/>
        </item>
    </channel>
</rss>
