<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 26 Aug 2026 05:53:08 +0530</lastBuildDate>
        <atom:link href="https://kannada.asianetnews.com/rss/davanagere" rel="self" type="application/rss+xml"/>
        <item>
            <title><![CDATA[ಬಟ್ಟೆ ಎಳೆದಾಡಿ "ಬೇಬಿ ಡಾರ್ಲಿಂಗ್ ನನ್ನ ಇಷ್ಟಪಡ್ತೀಯಾ?, ವಿದ್ಯಾರ್ಥಿನಿಯರಿಗೆ ದಾವಣಗೆರೆ ಉಪನ್ಯಾಸಕನ ಕಾಟ!]]></title>
            <link>https://kannada.asianetnews.com/karnataka-districts/davanagere-college-lecturer-suspended-booked-under-pocso-female-students-gdp/articleshow-0kinytn</link>
            <guid isPermaLink="true">https://kannada.asianetnews.com/karnataka-districts/davanagere-college-lecturer-suspended-booked-under-pocso-female-students-gdp/articleshow-0kinytn</guid>
            <pubDate>Wed, 15 Jul 2026 15:42:37 +0530</pubDate>
            <description><![CDATA[ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kxjm0gyqm02kkq7tx5nww41p,imgname-davangere-college-lecturer-1784110138327.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಜಿಲ್ಲೆಯ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಪನ್ಯಾಸಕನೊಬ್ಬ ಕಾಲೇಜು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿK ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ವಿದ್ಯಾರ್ಥಿನಿಯರ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಎಫ್&zwnj;ಐಆರ್ (FIR) ದಾಖಲಾಗಿದೆ.&lt;/p&gt;&lt;p&gt;ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು, ಇಲಾಖಾ ವಿಚಾರಣೆ ಮುಗಿಯುವವರೆಗೆ ಉಪನ್ಯಾಸಕ ಮಲ್ಲಿಕಾರ್ಜುನನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.&lt;/p&gt;&lt;h2&gt;ಬೇಬಿ, ಡಾರ್ಲಿಂಗ್ ನನ್ನ ಇಷ್ಟಪಡ್ತೀಯಾ?&lt;/h2&gt;&lt;p&gt;ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನಲ್ಲಿ ತಮ್ಮ ಮಗಳೊಂದಿಗೆ ಉಪನ್ಯಾಸಕ ನಡೆದುಕೊಂಡ ಕೆಟ್ಟ ವರ್ತನೆಯನ್ನು ಉಲ್ಲೇಖಿಸಿದ್ದಾರೆ. ಉಪನ್ಯಾಸಕ ಮಲ್ಲಿಕಾರ್ಜುನ ಕಾಲೇಜಿನ ಬಾಲಕಿಯರ ಜೊತೆ ನಿರಂತರವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿಷಯವನ್ನು ನನ್ನ ಮಗಳು ನನ್ನ ಬಳಿ ತಿಳಿಸಿದ್ದಳು. ಪಾಠ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದಲ್ಲದೆ, ಬಟ್ಟೆ ಹಿಡಿದು ಎಳೆದಾಡಿ &quot;ಬೇಬಿ, ಡಾರ್ಲಿಂಗ್ ನನ್ನ ಇಷ್ಟಪಡ್ತೀಯಾ?&quot; ಎಂದು ಲೈಂಗಿಕವಾಗಿ ಪೀಡಿಸುತ್ತಿದ್ದ.&lt;/p&gt;&lt;p&gt;ಕಾಲೇಜಿನಲ್ಲಿ ಎಲ್ಲರೂ ಹೋದ ನಂತರ &quot;ನೀನು ಒಬ್ಬಳೇ ರೂಮ್&zwnj;ನಲ್ಲಿ ಇರು&quot; ಎಂದು ಬಾಲಕಿಗೆ ಒತ್ತಾಯಿಸುತ್ತಿದ್ದ. ಇದೇ ರೀತಿ ಕಾಲೇಜಿನ ಇತರ ಬಾಲಕಿಯರ ಮೇಲೂ ಆತ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದ್ಯಾರ್ಥಿನಿಯರ ಭವಿಷ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಾಯಿ ದೂರಿನಲ್ಲಿ ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/davanagere-college-lecturer-suspended-booked-under-pocso-female-students-gdp/articleshow-0kinytn"/>
        </item>
        <item>
            <title><![CDATA[ದಾವಣಗೆರೆ ದುರ್ಗಾಂಬಿಕಾ ದೇವಿ ಆಭರಣ ಕದ್ದು ಮಾರಿದ ಪೂಜಾರಿ; ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಾರ್ನಿಂಗ್!]]></title>
            <link>https://kannada.asianetnews.com/karnataka-districts/davanagere-temple-pujari-steals-goddess-durgambika-gold-ss-mallikarjun-issues-strict-warning/articleshow-102d7d9</link>
            <guid isPermaLink="true">https://kannada.asianetnews.com/karnataka-districts/davanagere-temple-pujari-steals-goddess-durgambika-gold-ss-mallikarjun-issues-strict-warning/articleshow-102d7d9</guid>
            <pubDate>Mon, 27 Jul 2026 08:33:50 +0530</pubDate>
            <description><![CDATA[&lt;p&gt;ದಾವಣಗೆರೆಯ ದುರ್ಗಾಂಬಿಕಾ ದೇವಸ್ಥಾನದ ಪೂಜಾರಿ ಆಕಾಶ್, ದೇವಿಯ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು, ಕರಗಿಸಿ ಮಾರಾಟ ಮಾಡಿದ್ದಾನೆ. ಈ ವಂಚನೆ ಬೆಳಕಿಗೆ ಬಂದ ನಂತರ, ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದ ದೇವಸ್ಥಾನ ಟ್ರಸ್ಟ್, ಕಳುವಾದ ಸಂಪೂರ್ಣ ಚಿನ್ನವನ್ನು ವಾಪಸ್ ನೀಡುವಂತೆ ಆರೋಪಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಸದ್ಯ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kygr1rzbfzd67j6awn0rf3fa,imgname-davanagere-durgambika-temple-gold-theft-by-pujari-1785121006571.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಜು.27): ದಾ&lt;/strong&gt;ವಣಗೆರೆ ನಗರದ ಗ್ರಾಮ ದೇವತೆ, ಭಕ್ತರ ಆರಾಧ್ಯ ದೈವ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಮಹಾ ವಂಚನೆಯೊಂದು ಬೆಳಕಿಗೆ ಬಂದಿದ್ದು, ದೇವಿಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೇವಸ್ಥಾನದ ಪೂಜಾರಿಯೇ ಕದ್ದು ಮಾರಾಟ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.&lt;/p&gt;&lt;p&gt;ದೇವಸ್ಥಾನದ ಅರ್ಚಕರಲ್ಲಿ ಒಬ್ಬನಾದ ಆಕಾಶ್ ಎಂಬಾತ ದೇವಿಯ ಮೈಮೇಲಿದ್ದ ಹಾಗೂ ಭಕ್ತರು ನೀಡಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು, ಅವುಗಳನ್ನು ಕರಗಿಸಿ ಚಿನ್ನದ ಗಟ್ಟಿಯನ್ನಾಗಿ ಮಾಡಿ ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ದೇವಸ್ಥಾನದಲ್ಲಿದ್ದ ದೇವಿಯ ಒಡವೆಗಳು ನಾಪತ್ತೆಯಾಗಿರುವ ಸುದ್ದಿ ನಗರದಾದ್ಯಂತ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆಯೇ ಆಕ್ರೋಶಗೊಂಡ ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಜಮಾಯಿಸಿದರು.&lt;/p&gt;&lt;h2&gt;&lt;strong&gt;ದೇವಸ್ಥಾನ ಟ್ರಸ್ಟ್&zwnj;ನಿಂದ ತುರ್ತು ಸಭೆ:&lt;/strong&gt;&lt;/h2&gt;&lt;p&gt;ಸ್ಥಿತಿ ಗಂಭೀರಗೊಳ್ಳುತ್ತಿದ್ದಂತೆಯೇ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ದೇವಸ್ಥಾನದ ಆವರಣದಲ್ಲೇ ತುರ್ತು ಸಭೆ ನಡೆಸಲಾಯಿತು. ಕಳ್ಳತನ ಎಸಗಿದ್ದ ಪೂಜಾರಿ ಆಕಾಶ್ ಹಾಗೂ ಆತನಿಂದ ಅಕ್ರಮವಾಗಿ ಚಿನ್ನಾಭರಣಗಳನ್ನು ಖರೀದಿಸಿದ್ದ ಸ್ಥಳೀಯ ವ್ಯಾಪಾರಿಯನ್ನು ಆಡಳಿತ ಮಂಡಳಿಯು ಸ್ಥಳಕ್ಕೆ ಕರೆಸಿ ತೀವ್ರ ತರಾಟೆಗೆ ತೆಗೆದುಕೊಂಡಿತು.&lt;/p&gt;&lt;h2&gt;&lt;strong&gt;ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಖಡಕ್ ವಾರ್ನಿಂಗ್:&lt;/strong&gt;&lt;/h2&gt;&lt;p&gt;ಸಭೆಯಲ್ಲಿ ಮಾತನಾಡಿದ ಎಸ್.ಎಸ್. ಮಲ್ಲಿಕಾರ್ಜುನ್, &quot;ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ ಪ್ರತಿಯೊಂದು ಚಿನ್ನಾಭರಣದ ನಿಖರವಾದ ಲೆಕ್ಕ ನಮ್ಮಲ್ಲಿದೆ. ಎಷ್ಟು ಪ್ರಮಾಣದ ಚಿನ್ನಾಭರಣ ಇತ್ತು ಮತ್ತು ಅದರಲ್ಲಿ ಎಷ್ಟು ನಾಪತ್ತೆಯಾಗಿದೆ ಎಂಬ ಸಂಪೂರ್ಣ ವಿವರ ನಮ್ಮಲ್ಲಿದ್ದು, ಪ್ರತಿಯೊಂದು ಗ್ರಾಮ್ ಚಿನ್ನವೂ ವಾಪಸ್ ಬರಲೇಬೇಕು&quot; ಎಂದು ಕಳವಿನ ಕೃತ್ಯ ಎಸಗಿದ ಪೂಜಾರಿ ಹಾಗೂ ಅದನ್ನು ಖರೀದಿಸಿದ ವ್ಯಾಪಾರಿಗೆ ನೇರವಾಗಿ ಎಚ್ಚರಿಕೆ ನೀಡಿದರು.&lt;/p&gt;&lt;p&gt;ಇಷ್ಟೆಲ್ಲಾ ಹೈಡ್ರಾಮಾ ನಡೆದರೂ, ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ಪ್ರಕರಣ (FIR) ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ದೇವಸ್ಥಾನದ ಆವರಣದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು, ಭಕ್ತರು ಕಳುವಾದ ಆಭರಣಗಳ ಶೀಘ್ರ ಮರುಪಡೆಯುವಿಕೆಗೆ ಆಗ್ರಹಿಸುತ್ತಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/davanagere-temple-pujari-steals-goddess-durgambika-gold-ss-mallikarjun-issues-strict-warning/articleshow-102d7d9"/>
        </item>
        <item>
            <title><![CDATA[ಹೆಂಡತಿಗೆ ಮುತ್ತೈದೆ ಸಾವು ಕರುಣಿಸಿ, ತಾನೂ ಸಾವಿನಲ್ಲಿ ಒಂದಾದ ಗಂಡ; ಶೋಕದಲ್ಲಿ ಮುಳುಗಿದ ಗ್ರಾಮ!]]></title>
            <link>https://kannada.asianetnews.com/relationship/davanagere-elderly-couple-joined-also-death-means-dies-hours-apart-in-hadadi-village/articleshow-1gz1g9b</link>
            <guid isPermaLink="true">https://kannada.asianetnews.com/relationship/davanagere-elderly-couple-joined-also-death-means-dies-hours-apart-in-hadadi-village/articleshow-1gz1g9b</guid>
            <pubDate>Mon, 10 Aug 2026 13:18:36 +0530</pubDate>
            <description><![CDATA[&lt;p&gt;ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದಜ್ಜಿ ನಿಧನರಾದ ಕೆಲವೇ ಗಂಟೆಗಳಲ್ಲಿ, ಅವರ ಪತಿ ಮಲ್ಲಜ್ಜ ಕೂಡ ಪತ್ನಿಯ ಅಗಲಿಕೆಯ ದುಃಖದಲ್ಲಿ ಕೊನೆಯುಸಿರೆಳೆದಿದ್ದಾರೆ. ಸಾವಿನಲ್ಲೂ ಒಂದಾದ ಈ ವೃದ್ಧ ದಂಪತಿಯ ಹೃದಯವಿದ್ರಾವಕ ಘಟನೆ ಇಡೀ ಗ್ರಾಮದಲ್ಲಿ ಶೋಕವನ್ನುಂಟುಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzna9fkv5r5nqp3qq8rh855j,imgname-davanagere-couple-joined-death-1786348093051.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಆ.10): 'ನೂ&lt;/strong&gt;ರು ಕಾಲ ಜೊತೆಯಾಗಿ ಬಾಳಿ, ಸಾವಿನಲ್ಲೂ ಒಂದಾಗುತ್ತೇವೆ' ಎಂಬ ಮಾತಿಗೆ ನಿದರ್ಶನವೆಂಬಂತೆ ವೃದ್ಧ ದಂಪತಿಯೊಬ್ಬರು ಕೆಲವೇ ಗಂಟೆಗಳ ಅಂತರದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಸಿದ್ದಜ್ಜಿ ಹಾಗೂ ಅವರ ಪತಿ ಮಲ್ಲಜ್ಜ (75) ಮೃತಪಟ್ಟ ವೃದ್ಧ ದಂಪತಿ. ಇಬ್ಬರೂ ಸುದೀರ್ಘ ಕಾಲದ ದಾಂಪತ್ಯ ಜೀವನ ನಡೆಸಿ, ಕೊನೆಗೆ ಸಾವಿನಲ್ಲೂ ಒಂದಾಗುವ ಮೂಲಕ ಇಡೀ ಗ್ರಾಮಸ್ಥರ ಕಣ್ಣಂಚಿನಲ್ಲಿ ನೀರು ತರಿಸಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಸಿದ್ದಜ್ಜಿ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದರು. ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸಿದ್ದಜ್ಜಿ ಅವರ ಅಗಲಿಕೆಯಿಂದ ತೀವ್ರ ಶೋಕದಲ್ಲಿ ಮುಳುಗಿದ್ದರು. ಇಂದು (ಆಗಸ್ಟ್ 10) ಬೆಳಗ್ಗೆ ಗ್ರಾಮದಲ್ಲಿ ಸಿದ್ದಜ್ಜಿ ಅವರ ಅಂತ್ಯಕ್ರಿಯೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಇನ್ನೇನು ಅಂತಿಮ ಯಾತ್ರೆ ಆರಂಭವಾಗಬೇಕು ಎನ್ನುವಷ್ಟರಲ್ಲಿ, ಪತ್ನಿಯ ಅಗಲಿಕೆಯ ದುಃಖದಲ್ಲಿದ್ದ ಪತಿ ಮಲ್ಲಜ್ಜ (75) ಅವರ ಆರೋಗ್ಯದಲ್ಲೂ ಏಕಾಏಕಿ ಏರುಪೇರಾಗಿದೆ. ಬೆಳಗ್ಗೆ ಸುಮಾರು 10.30ರ ವೇಳೆಗೆ ಮಲ್ಲಜ್ಜ ಕೂಡ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;h2&gt;&lt;strong&gt;ಕುಟುಂಬಸ್ಥರ ಆಕ್ರಂದನ, ಗ್ರಾಮದಲ್ಲಿ ಶೋಕಸಾಗರ:&lt;/strong&gt;&lt;/h2&gt;&lt;p&gt;ಕೇವಲ ಕೆಲವೇ ಗಂಟೆಗಳ ಅಂತರದಲ್ಲಿ ಮನೆಯ ಇಬ್ಬರು ಹಿರಿಯರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಸಂಬಂಧಿಕರ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಒಂದೇ ದಿನ, ಒಂದೇ ಮನೆಯಿಂದ ದಂಪತಿಗಳಿಬ್ಬರ ಅಂತಿಮ ಯಾತ್ರೆ ಹೊರಡುತ್ತಿರುವುದು ಹದಡಿ ಗ್ರಾಮಸ್ಥರಲ್ಲಿ ಕಂಬನಿ ತರಿಸಿದೆ. ಸದ್ಯ ಹದಡಿ ಗ್ರಾಮದಲ್ಲಿ ವೃದ್ಧ ದಂಪತಿ ಮಲ್ಲಜ್ಜ ಹಾಗೂ ಸಿದ್ದಜ್ಜಿ ಅವರ ಅಂತ್ಯಕ್ರಿಯೆಗೆ ಏಕಕಾಲದಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಗ್ರಾಮದ ಹಿರಿಯರು ಹಾಗೂ ಬಂಧುಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/relationship/davanagere-elderly-couple-joined-also-death-means-dies-hours-apart-in-hadadi-village/articleshow-1gz1g9b"/>
        </item>
        <item>
            <title><![CDATA[ನಾಳೆ ದಾವಣಗೆರೆ ಬಂದ್.. ತುರ್ತು ಸೇವೆ ಬಿಟ್ಟ ಎಲ್ಲಾ ಬಂದ್ ಬಂದ್! ಕಾರಣ ಏನು..?]]></title>
            <link>https://kannada.asianetnews.com/davanagere/bhartiya-raitha-okkuta-has-called-for-a-davanagere-bandh-tomorrow-gkn/articleshow-516wil3</link>
            <guid isPermaLink="true">https://kannada.asianetnews.com/davanagere/bhartiya-raitha-okkuta-has-called-for-a-davanagere-bandh-tomorrow-gkn/articleshow-516wil3</guid>
            <pubDate>Sun, 23 Aug 2026 22:22:09 +0530</pubDate>
            <description><![CDATA[&lt;p&gt;ಭದ್ರಾ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ನಾಳೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ದಾವಣಗೆರೆ ನಗರ ಬಂದ್&zwnj;ಗೆ ಭಾರತೀಯ ರೈತ ಒಕ್ಕೂಟ ಕರೆ ನೀಡಿದೆ. ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು, ಖಾಸಗಿ ಬಸ್, ಆಟೋ ಮತ್ತು ವರ್ತಕರ ಸಂಘ ಬೆಂಬಲ ಸೂಚಿಸಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0qrhy31jg64e1905hgbnxa4,imgname-davanagere-bandh--1--1787503900769.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಭದ್ರಾ ಜಲಾಶಯದಿಂದ ನಾಲೆಗಳಿಗೆ ತಕ್ಷಣವೇ ನೀರು ಬಿಡಬೇಕೆಂದು ಆಗ್ರಹಿಸಿ 'ಭಾರತೀಯ ರೈತ ಒಕ್ಕೂಟ' ನಾಳೆ (ಸೋಮವಾರ) ದಾವಣಗೆರೆ ನಗರ ಬಂದ್&zwnj;ಗೆ ಕರೆ ನೀಡಿದೆ. ರೈತರ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿರುವ ಈ ಬಂದ್&zwnj;ಗೆ ಜಿಲ್ಲೆಯ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.&lt;/p&gt;&lt;h2&gt;&lt;strong&gt;ಬಂದ್ ಸಮಯ ಮತ್ತು ಪ್ರತಿಭಟನೆ&lt;/strong&gt;&lt;/h2&gt;&lt;p&gt;ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರ ಬಂದ್&zwnj;ಗೆ ಕರೆ ನೀಡಲಾಗಿದೆ. ಬೆಳಗ್ಗೆ 7 ಗಂಟೆಗೆ ದಾವಣಗೆರೆಯ ಪ್ರಮುಖ ಕೇಂದ್ರವಾದ ಜಯದೇವ ವೃತ್ತದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಭಾರತೀಯ ರೈತ ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ಆರ್. ಲಿಂಗರಾಜ್ ಮಾತನಾಡಿ, ಬಂದ್&zwnj;ಗೆ ಸಹಕರಿಸುವಂತೆ ವರ್ತಕರು ಮತ್ತು ಉದ್ಯಮಿಗಳಿಗೆ ಮನವಿ ಮಾಡಿದ್ದೇವೆ. ದಲ್ಲಾಳಿಗಳ ಸಂಘ, ಖಾಸಗಿ ಬಸ್ ಮಾಲೀಕರು ಹಾಗೂ ಆಟೋ ಚಾಲಕರ ಸಂಘ ಈಗಾಗಲೇ ನಮಗೆ ಬೆಂಬಲ ಘೋಷಿಸಿವೆ. ಶಾಂತಿಯುತವಾಗಿ ಬಂದ್ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಯಾವುವು ಲಭ್ಯವಿರುತ್ತವೆ?&lt;/strong&gt;&lt;/h2&gt;&lt;p&gt;ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಆಸ್ಪತ್ರೆಗಳು ಮತ್ತು ಮೆಡಿಕಲ್ ಶಾಪ್&zwnj;ಗಳು. ಹಾಲು ಮಾರಾಟ ಕೇಂದ್ರಗಳು ತೆರೆದಿರಲಿವೆ. ನಗರದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಭದ್ರಾ ಡ್ಯಾಂನಲ್ಲಿ 175 ಅಡಿ ನೀರಿದೆ. ಹಿಂದೆ 150 ಅಡಿ ಇದ್ದಾಗಲೇ ನಾಲೆಗಳಿಗೆ ನೀರು ಬಿಟ್ಟ ಇತಿಹಾಸವಿದೆ. ಆದರೆ ಸರ್ಕಾರ ಈಗ ಅಡಿಕೆ, ತೆಂಗು ಬೆಳೆಗಾರರು ಮತ್ತು ಭತ್ತ ಬೆಳೆಗಾರರ ನಡುವೆ ಗೊಂದಲ ಸೃಷ್ಟಿಸಿ ಎರಡು ಗುಂಪು ಮಾಡುತ್ತಿದೆ ಎಂದು ಆರೋಪಿಸಿದರು.&lt;/p&gt;&lt;h2&gt;&lt;strong&gt;ರೈತರ ಸಂಕಷ್ಟವೇನು?&lt;/strong&gt;&lt;/h2&gt;&lt;p&gt;ಈಗಾಗಲೇ ಜಿಲ್ಲೆಯ ಶೇ. 30ರಷ್ಟು ರೈತರು ಭತ್ತದ ನಾಟಿ ಮಾಡಿದ್ದಾರೆ. ಸಾವಿರಾರು ರೈತರು ಸಸಿ ಮಡಿಗಳನ್ನು ಮಾಡಿ ನಾಟಿಗೆ ಸಿದ್ಧರಾಗಿದ್ದಾರೆ. ನೀರು ಬಿಡದಿದ್ದರೆ ಈ ಸಸಿಗಳು ಒಣಗಿ ಹೋಗುವ ಭೀತಿ ಇದೆ. ಪ್ರಸ್ತುತ ಡ್ಯಾಂಗೆ 4000 ಕ್ಯೂಸೆಕ್ ಒಳಹರಿವು ಇದೆ. ನಮಗೆ ಬೇಕಿರುವುದು ಕೇವಲ 3000 ಕ್ಯೂಸೆಕ್ ನೀರು ಮಾತ್ರ. ಆದರೂ ಸರ್ಕಾರ ವಿಳಂಬ ಮಾಡುತ್ತಿದೆ. ಸಿಎಂ ಜೊತೆ ಮಾತನಾಡುತ್ತೇವೆ ಎಂದು ಅಧಿಕಾರಿಗಳು ಹೇಳಿ ಕಳಿಸಿದ್ದಾರೆಯೇ ಹೊರತು ಇದುವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಹದಿನೈದು ದಿನಗಳಿಂದ ನಾವು ಮನವಿ ಮಾಡುತ್ತಿದ್ದೇವೆ, ನಿನ್ನೆ ರಾಷ್ಟ್ರೀಯ ಹೆದ್ದಾರಿ ತಡೆದರೂ ಸರ್ಕಾರ ಕಣ್ಣು ಬಿಡುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಬಂದ್&zwnj;ಗೆ ಕರೆ ನೀಡಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ದಾವಣಗೆರೆಯ ನಾಗರಿಕರು ರೈತರ ಈ ನ್ಯಾಯಯುತ ಹೋರಾಟಕ್ಕೆ ಸಹಕರಿಸಬೇಕು ಎಂದು ಭಾರತೀಯ ರೈತ ಒಕ್ಕೂಟ ಮನವಿ ಮಾಡಿದೆ.&lt;/p&gt;]]></content:encoded>
            <category>davanagere</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/davanagere/bhartiya-raitha-okkuta-has-called-for-a-davanagere-bandh-tomorrow-gkn/articleshow-516wil3"/>
        </item>
        <item>
            <title><![CDATA[50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ: ಜನರಿಗೆ ಕೈಗೆಟುಕುವ ಬೆಲೆಗೆ ನಿವೇಶನ]]></title>
            <link>https://kannada.asianetnews.com/karnataka-districts/davanagere-harihara-new-development-on-more-than-50-acres-of-land-says-minister-yathindra-siddaramaiah-mrq/articleshow-7y4b4uh</link>
            <guid isPermaLink="true">https://kannada.asianetnews.com/karnataka-districts/davanagere-harihara-new-development-on-more-than-50-acres-of-land-says-minister-yathindra-siddaramaiah-mrq/articleshow-7y4b4uh</guid>
            <pubDate>Sat, 04 Jul 2026 07:55:19 +0530</pubDate>
            <description><![CDATA[ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ 50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿ, ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಪೌರಕಾರ್ಮಿಕರ ನೇಮಕಾತಿ, ಪಾರ್ಕ್ ಅಭಿವೃದ್ಧಿ ಮತ್ತು ಇ-ಖಾತಾ ಪ್ರಕ್ರಿಯೆ ಸರಳೀಕರಣಗೊಳಿಸುವಂತೆಯೂ ಅವರು ಸೂಚನೆ ನೀಡಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01kwnf0mhhx1jcd3ac78v8y1v6,imgname-davanagere-harihara-1783131820593.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ:&lt;/strong&gt; ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಾಸ್ಟರ್ ಪ್ಲಾನ್&zwnj; ಪರಿಷ್ಕರಣೆಗೆ ಅನುಮೋದನೆ ನೀಡಿ, ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆ ಮಾಡಲು 50 ಎಕರೆಗಿಂತಲೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸುವುದಾಗಿ ನಗರಾಭಿ&zwj;ವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.&lt;/p&gt;&lt;p&gt;ನಗರದ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ನಗರ ಪಾಲಿಕೆ ಹಾಗೂ ದೂಡಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೂಡಾದ ಮಾಸ್ಟರ್ ಪ್ಲಾನ್ ಪರಿಷ್ಕರಣೆಗೆ ಅನುಮೋದನೆ ನೀಡಿ, ಪ್ರಾಧಿಕಾರದಿಂದ ಕೈಗೆಟುಕುವ ದರದಲ್ಲಿ ಜನರಿಗೆ ನಿವೇಶನ ಹಂಚಿಕೆಗೆ 50 ಎಕರೆಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಲಾಗುವುದು ಎಂದರು.&lt;/p&gt;&lt;h2&gt;&lt;strong&gt;ಪ್ರಾಧಿಕಾರದಿಂದ ಬಡಾವಣೆಗಳ ಅಭಿವೃದ್ಧಿ&lt;/strong&gt;&lt;/h2&gt;&lt;p&gt;ಕುಂದುವಾಡ ಸರ್ವೆ ನಂಬರಲ್ಲಿ ಪ್ರಾಧಿಕಾರದಿಂದ ನಿವೇಶನ ರಚಿಸಲು ಸ್ವಾಧೀನ ಮಾಡಿದ್ದ ಜಮೀನು ವಾಪಸ್ ನೀಡುವಂತೆ ರೈತರ ಒತ್ತಾಯವಿದೆ. ಯಾರು ಜಮೀನು ನೀಡಲು ಒಪ್ಪಿ ಬರುತ್ತಾರೋ ಅಂತಹ ರೈತರ ಜಮೀನು ಮಾತ್ರ ಪಡೆಯಬೇಕು. ಇಲ್ಲವಾದರೆ ನೇರ ಖರೀದಿ ಮೂಲಕ ಎಲ್ಲೆಲ್ಲಿ ಜಮೀನು ಸಿಗುತ್ತದೆ ಅಂತಹ ಕಡೆಗಳಲ್ಲಿ ಪ್ರಾಧಿಕಾರದಿಂದ ಬಡಾವಣೆಗಳನ್ನು ಅಭಿವೃದ್ಧಿಪಡಿಸಿ, ನಿವೇಶನಗಳನ್ನಾಗಿ ಪರಿವರ್ತಿಸಬೇಕು ಎಂದು ಅವರು ಹೇಳಿದರು.&lt;/p&gt;&lt;p&gt;ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿಗೆ ಬಾಕಿ ಇರುವ ಪೌರ ಕಾರ್ಮಿಕರ ನೇಮಕಾತಿಯನ್ನು ಕಾಲಮಿತಿಯೊಳಗೆ ಮುಗಿಸಬೇಕು. ಎಸ್&zwnj;ಸಿಪಿ ಮತ್ತು ಟಿಎಸ್&zwj;ಪಿ ಅನುದಾನವನ್ನು ಪೌರಕಾರ್ಮಿಕರ ಆರೋಗ್ಯ, ಅಂತಹವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲುಬಳಸಬೇಕು ಎಂದು ಸೂಚಿಸಿದರು.&lt;/p&gt;&lt;p&gt;ದಾವಣಗೆರೆ, ಹರಿಹರ ನಗರದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಹಾಗೂ ಪ್ರಸ್ತುತ ಇರುವ ಪಾರ್ಕ್&zwj;ಗಳಲ್ಲಿ ಸಾರ್ವಜನಿಕರಿಗೆ, ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿಶೇಷ ಚೇತನರಿಗೆ ಆಸನ ಸೌಲಭ್ಯ ಮಾಡಬೇಕು, ಬೀದಿದೀಪ, ಶೌಚಾಲಯ, ಕ್ರೀಡಾ ಸಾಮಗ್ರಿಗಳು ಅಲ್ಲಿರಬೇಕು. ಮಕ್ಕಳಿಗೆ ಅಪಾಯಕಾರಿ ಆಗುವಂತಹ ಯಾವುದೇ ಕ್ರೀಡಾ ವಸ್ತುಗಳನ್ನು ಅಳವಡಿಸಬೇಡಿ ಎಂದು ಹೇಳಿದರು.&lt;/p&gt;&lt;p&gt;ಇ-ಖಾತಾ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು. ಇದನ್ನು ಅಭಿಯಾನದ ರೀತಿ ಕೈಗೊಂಡು ಸರಳವಾಗಿ ಜನರಿಗೆ ಇ-ಖಾತಾ ದಾಖಲೆ ಸಿಗುವಂತೆ ನೋಡಿಕೊಳ್ಳಿ ಎಂದು ಸಚಿವ ಯತೀಂದ್ರ ಸೂಚನೆ ನೀಡಿದರು. ಆಗ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಪಾಲಿಕೆ ಸಿಬ್ಬಂದಿ ಇ-ಖಾತಾ ನೀಡುವ ವಿಷಯದಲ್ಲಿ ವಿಳಂಬ ಮಾಡುತ್ತಿದ್ದರು. ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿದಾಗ ಎಲ್ಲರೂ ಎಚ್ಚರವಹಿಸಿ, ಚುರುಕಾದರು ಎಂದು ಸಚಿವರ ಗಮನಕ್ಕೆ ತಂದರು.&lt;/p&gt;&lt;h3&gt;&lt;strong&gt;2ನೇ ಹಂತದ ನಗರಗಳಲ್ಲಿ ನಗರೀಕರಣ ವೇಗ&lt;/strong&gt;&lt;/h3&gt;&lt;p&gt;ರಾಜ್ಯದಲ್ಲಿ ದಾವಣಗೆರೆ ಸೇರಿದಂತೆ 2ನೇ ಹಂತದ ನಗರಗಳಲ್ಲಿ ನಗರೀಕರಣ ವೇಗದಲ್ಲಿ ಸಾಗುತ್ತಿದೆ. ಹೈರೈಸ್ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿವೆ. ಜಿ+2 ಹಾಗೂ ಜಿ+3 ಮಾದರಿ ವಸತಿ ಕಟ್ಟಡಗಳ ನಿರ್ಮಾಣ, 21 ಮೀಟರ್ ಎತ್ತರದವರೆಗೆ ಕಟ್ಟಡಗಳಿಗೆ ಅನುಮತಿ ನೀಡುವ ವಿಚಾರದಲ್ಲಿ ಚಿಂತನೆ ನಡೆಯುಲಿ ಎಂದು ಹೇಳಿದರು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-harihara-new-development-on-more-than-50-acres-of-land-says-minister-yathindra-siddaramaiah-mrq/articleshow-7y4b4uh"/>
        </item>
        <item>
            <title><![CDATA[ದಾವಣಗೆರೆ ಶಾಸಕ ಸಮರ್ಥ ಶಾಮನೂರು ಕಾರು ಭೀಕರ ಅಪಘಾತ; ಓವರ್‌ಟೇಕ್ ಮಾಡುವಾಗ ಅನಾಹುತ]]></title>
            <link>https://kannada.asianetnews.com/karnataka-districts/davanagere-samarth-shamanuru-car-accident-in-chitradurga-gkn/articleshow-ammsa1f</link>
            <guid isPermaLink="true">https://kannada.asianetnews.com/karnataka-districts/davanagere-samarth-shamanuru-car-accident-in-chitradurga-gkn/articleshow-ammsa1f</guid>
            <pubDate>Mon, 24 Aug 2026 18:25:01 +0530</pubDate>
            <description><![CDATA[&lt;p&gt;ದಾವಣಗೆರೆ ಶಾಸಕ ಸಮರ್ಥ ಶಾಮನೂರು ಅವರ ಕಾರು ಚಿತ್ರದುರ್ಗದ ಹಿರಿಯೂರು ಬಳಿ ಸರಣಿ ಅಪಘಾತಕ್ಕೀಡಾಗಿದ್ದು, ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಮತ್ತೊಂದು ಕಾರಿನಲ್ಲಿದ್ದ ಸಂದೀಪ್ ಎಂಬುವವರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಘಟನೆ ಹೇಗೆ ಆಯಿತು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0sxby70wzd0ezjzrzsxzkrd,imgname-samarth-shamnuru-1787576056032.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿತ್ರದುರ್ಗ: &lt;/strong&gt;ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ದಾವಣಗೆರೆ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು ಅವರ ಕಾರು ಅಪಘಾತಕ್ಕೀಡಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಸಂಭವಿಸಿದ ಈ ಸರಣಿ ಅಪಘಾತದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ&lt;/strong&gt;&lt;/h2&gt;&lt;p&gt;ಶಾಸಕ ಸಮರ್ಥ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪ ಬಂದಾಗ, ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾಗಿದೆ. ಶಾಸಕರು ಪ್ರಯಾಣಿಸುತ್ತಿದ್ದ ಕಾರು ಕೂಡ ಈ ವೇಳೆ ಹಿಂಬದಿಯಲ್ಲೇ ಬರುತ್ತಿತ್ತು. ಅಪಘಾತದ ಗಡಿಬಿಡಿಯಲ್ಲಿ ಶಾಸಕರ ಕಾರಿಗೆ ಮತ್ತೊಂದು ಎರ್ಟಿಗಾ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಓರ್ವನಿಗೆ ಗಾಯ, ಬೆಂಗಳೂರಿಗೆ ರವಾನೆ&lt;/strong&gt;&lt;/h2&gt;&lt;p&gt;ಪಲ್ಟಿಯಾದ ಕಾರಿನಲ್ಲಿದ್ದ ಸಂದೀಪ್ (45) ಎಂಬುವವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಸಂದೀಪ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಶಾಸಕ ಸಮರ್ಥ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ನಂತರ ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.&lt;/p&gt;&lt;p&gt;ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗದ ಚಾಲನೆ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಲು ಹೋದದ್ದು ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.&lt;/p&gt;]]></content:encoded>
            <category>davanagere</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/karnataka-districts/davanagere-samarth-shamanuru-car-accident-in-chitradurga-gkn/articleshow-ammsa1f"/>
        </item>
        <item>
            <title><![CDATA[ಕಮ್ಮಾರಗಟ್ಟೆಯಲ್ಲಿ ಐತಿಹಾಸಿಕ ಕಾರ್ಣಿಕೋತ್ಸವ.. ರೈತರಿಗೆ ಸಿಕ್ಕೇ ಬಿಡ್ತು ಗುಡ್‌ನ್ಯೂಸ್]]></title>
            <link>https://kannada.asianetnews.com/davanagere/kammaragatte-karnika-nudi-pearls-of-earth-to-reach-the-sky-a-warning-of-soaring-prices-devotees-spark-debate-gkn/articleshow-azth8mv</link>
            <guid isPermaLink="true">https://kannada.asianetnews.com/davanagere/kammaragatte-karnika-nudi-pearls-of-earth-to-reach-the-sky-a-warning-of-soaring-prices-devotees-spark-debate-gkn/articleshow-azth8mv</guid>
            <pubDate>Mon, 17 Aug 2026 22:45:52 +0530</pubDate>
            <description><![CDATA[&lt;p&gt;ದಾವಣಗೆರೆಯ ಕಮ್ಮಾರಗಟ್ಟೆಯಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ 'ಭೂಲೋಕದ ಮುತ್ತು ಗಗನಕ್ಕೆ ಏರಿತಲೆ' ಎಂಬ ಭವಿಷ್ಯವಾಣಿ ಕೇಳಿಬಂದಿದೆ. ಇದು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸೂಚನೆಯೋ ಅಥವಾ ರೈತರ ಬೆಳೆಗೆ ಸಿಗುವ ಬಂಪರ್ ಬೆಲೆಯ ಮುನ್ಸೂಚನೆಯೋ ಎಂಬ ಚರ್ಚೆ ಭಕ್ತರಲ್ಲಿ ಶುರುವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m08bg5ppkjet4enzbrmmygvx,imgname-kammaragatte-karnika-1786986895062.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ನಾಡಿನಾದ್ಯಂತ ಗರುಡ ಪಂಚಮಿಯ ಸಡಗರ ಮನೆ ಮಾಡಿತ್ತು. ಇತ್ತ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಮೈನವಿರೇಳಿಸುವ ಕಾರ್ಣಿಕೋತ್ಸವ ಜರುಗಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ಕಾರ್ಣಿಕದ ಭವಿಷ್ಯವಾಣಿ ಕೇಳಲು ಸಾವಿರಾರು ಭಕ್ತರು ಜಮಾಯಿಸಿದ್ದರು. ಈ ಬಾರಿ ನುಡಿಯಲಾದ ಭವಿಷ್ಯವು ಬೆಲೆ ಏರಿಕೆ ಹಾಗೂ ರೈತರ ಬೆಳೆಯ ವಿಚಾರದಲ್ಲಿ ಭಾರಿ ಕುತೂಹಲ ಮೂಡಿಸಿದೆ.&lt;/p&gt;&lt;h2&gt;&lt;strong&gt;ಏನಿದು ಭವಿಷ್ಯವಾಣಿ?&lt;/strong&gt;&lt;/h2&gt;&lt;p&gt;ಕುಂಬಳೂರಿನ ಗಣಮಗ ದುಂಡ್ಯಪ್ಪ ಅವರು ಬಿಲ್ಲು ಏರಿ ಆಂಜನೇಯ ಸ್ವಾಮಿಯ ಸ್ಮರಣೆ ಮಾಡುತ್ತಾ, &quot;ಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರ.. ಪರಾಕ್! ಎಂದು ದೈವವಾಣಿ ನುಡಿದರು.&lt;/p&gt;&lt;p&gt;ಕಾರ್ಣಿಕದ ಈ ನಿಗೂಢ ನುಡಿಗಳನ್ನು ಭಕ್ತರು ಹಾಗೂ ಹಿರಿಯರು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ. ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಂದರೆ ಭೂಮಿಯಲ್ಲಿ ಬೆಳೆದ ಬೆಳೆಗಳು ಅಥವಾ ಆಹಾರ ಧಾನ್ಯಗಳ ಬೆಲೆ ಗಗನಕ್ಕೆ ಏರಲಿದೆ. ಅಂದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂಬುದು ಒಂದು ವಿಶ್ಲೇಷಣೆ.&lt;/p&gt;&lt;p&gt;ರೈತರು ಬೆಳೆದ ಮುತ್ತಿನಂತಹ ಬೆಳೆಗೆ (ಧಾನ್ಯಗಳಿಗೆ) ಉತ್ತಮ ಮಾರುಕಟ್ಟೆ ದರ ಸಿಗಲಿದೆ. ಇದರಿಂದ ರೈತರಿಗೆ ಆರ್ಥಿಕವಾಗಿ ಲಾಭವಾಗಲಿದೆ ಎಂಬ ಆಶಾವಾದವೂ ವ್ಯಕ್ತವಾಗಿದೆ. ಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ ಎಂದರೆ ಅಶ್ವಿನಿ ಮಳೆ ಮಾಯವಾಗಿ ಅಥವಾ ಮಳೆ ಕೊರತೆಯಾಗಿ ಬೆಳೆಗಳ ಇಳುವರಿ ಕಡಿಮೆಯಾಗಬಹುದು. ಈ ಕಾರಣದಿಂದ ಬೆಲೆ ಹೆಚ್ಚಾಗಬಹುದು ಎಂಬ ಎಚ್ಚರಿಕೆಯನ್ನೂ ಭಕ್ತರು ಕಾಣುತ್ತಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ಮೈಸೂರು ಅರಸರೂ ಕಾಯುತ್ತಿದ್ದ ಕಾರ್ಣಿಕ&lt;/strong&gt;&lt;/h2&gt;&lt;p&gt;ಕಮ್ಮಾರಗಟ್ಟೆಯ ಕಾರ್ಣಿಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಿಂದೆ ಮೈಸೂರಿನ ಮಹಾರಾಜರು ಕೂಡ ಈ ಗ್ರಾಮದ ಕಾರ್ಣಿಕದ ಭವಿಷ್ಯವಾಣಿಗಾಗಿ ಕಾತರದಿಂದ ಕಾಯುತ್ತಿದ್ದರು ಎಂಬ ಪ್ರತೀತಿ ಇದೆ. ನಾಡಿನ ಸುಭಿಕ್ಷೆ ಮತ್ತು ಮಳೆ-ಬೆಳೆಯ ಬಗ್ಗೆ ಇಲ್ಲಿನ ಭವಿಷ್ಯವಾಣಿ ಅತ್ಯಂತ ನಿಖರವಾಗಿರುತ್ತದೆ ಎಂಬುದು ಭಕ್ತರ ಅಚಲ ನಂಬಿಕೆ. ಹೆಳವನಕಟ್ಟೆ ಗಿರಿಯಮ್ಮನ ಸಾನಿಧ್ಯದಲ್ಲಿ ಕಮ್ಮಾರಗಟ್ಟೆ ಮತ್ತು ಕುಂಬಳೂರಿನ ಆಂಜನೇಯ ಸ್ವಾಮಿಯ ನೇತೃತ್ವದಲ್ಲಿ ಈ ಅದ್ಧೂರಿ ಜಾತ್ರೆ ನಡೆಯಿತು. ಮಳೆ ಬಿಡುವು ನೀಡಿದ್ದರಿಂದ ದಾವಣಗೆರೆ ಮಾತ್ರವಲ್ಲದೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಸಹಸ್ರಾರು ಭಕ್ತರು ಆಗಮಿಸಿದ್ದರು. ವಿಶೇಷವಾಗಿ ನವದಂಪತಿಗಳು ಇಲ್ಲಿನ ಬುಡಮೇಲಾದ ಹುಣಸೆ ಮರಕ್ಕೆ ಮಂಡಕ್ಕಿ ಎರಚಿ ದೇವರಿಗೆ ನಮಿಸಿದರು.&lt;/p&gt;&lt;p&gt;ಒಟ್ಟಾರೆಯಾಗಿ ಕಮ್ಮಾರಗಟ್ಟೆಯ ಈ ಬಾರಿಯ ಕಾರ್ಣಿಕವು ನಾಡಿನ ರೈತರಿಗೆ ಸಮೃದ್ಧಿ ತರಲಿ ಹಾಗೂ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟದಿರಲಿ ಎಂದು ಭಕ್ತರು ಪ್ರಾರ್ಥಿಸಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/davanagere/kammaragatte-karnika-nudi-pearls-of-earth-to-reach-the-sky-a-warning-of-soaring-prices-devotees-spark-debate-gkn/articleshow-azth8mv"/>
        </item>
        <item>
            <title><![CDATA[ದಾವಣಗೆರೆ: ದೇವರ ದರ್ಶನಕ್ಕೆ ಹೋದ ದಲಿತರ ಮೇಲೆ ಗ್ರಾಮಸ್ಥರಿಂದ ಹಲ್ಲೆ, ಬೆಳಲಗೆರೆಯಲ್ಲಿ ನಡೆದಿದ್ದೇನು?]]></title>
            <link>https://kannada.asianetnews.com/karnataka-districts/belalagere-villagers-assault-dalits-who-visited-a-temple-incident-reported-in-davanagere-rav/articleshow-d43rx8l</link>
            <guid isPermaLink="true">https://kannada.asianetnews.com/karnataka-districts/belalagere-villagers-assault-dalits-who-visited-a-temple-incident-reported-in-davanagere-rav/articleshow-d43rx8l</guid>
            <pubDate>Sun, 02 Aug 2026 08:44:50 +0530</pubDate>
            <description><![CDATA[&lt;p&gt;ದಾವಣಗೆರೆ ಜಿಲ್ಲೆಯ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ದಲಿತ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹಾಕದಂತೆ ಎಚ್ಚರಿಕೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz06tyyqe8hfas04t439ymyq,imgname-----------------------2026-08-02t083152.555-1785639828439.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಆ.2):&lt;/strong&gt; ದೇವಸ್ಥಾನ ಪ್ರವೇಶ ಮಾಡಿದರು ಎಂಬ ಕಾರಣಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ಮಾಡಿದ್ದರಿಂದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಬೆಳಲಗೆರೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;h2&gt;ದೇವರ ದರ್ಶನ ಮಾಡಿ ಹೊರಬರುತ್ತಿದ್ದಂತೆ ಹಲ್ಲೆ&lt;/h2&gt;&lt;p&gt;ಬೆಳಲಗೆರೆಯಲ್ಲಿ ಶುಕ್ರವಾರ ಊರ ಹೊರಗೆ ಎಡೆ ಇಟ್ಟು ಬರುವಾಗ ದಲಿತ ಸಮುದಾಯದ ಐದಾರು ಯುವಕರು ಗ್ರಾಮದ ದೊಡ್ಡಯ್ಯ ದೇವಸ್ಥಾನ(Doddaiah Temple)ಕ್ಕೆ ಹೋಗಿ, ದೇವರ ದರ್ಶನ ಮಾಡಿ, ಕೈಮುಗಿದು ಹೊರ ಬರುತ್ತಿದ್ದರು. ಈ ವೇಳೆ ಮತ್ತೊಂದು ಜಾತಿಯ ಜನರು ಅದಕ್ಕೆ ಆಕ್ಷೇಪಿಸಿದ್ದಾರೆ. ಘಟನೆಯಲ್ಲಿ ದಲಿತ ಯುವಕರನ್ನು ಹಗ್ಗಗಳಿಂದ ಕಟ್ಟಿ ಹಾಕಿ, ಹಲ್ಲೆ ಮಾಡಿದ್ದಾರೆಂದು ಗ್ರಾಮದ ದಲಿತರು ಆರೋಪಿಸಿದ್ದಾರೆ.&lt;/p&gt;&lt;p&gt;ಅಜ್ಜಿ ಹಬ್ಬ ಆಚರಿಸಿ, ಸಿಹಿ ಅಡುಗೆ ಮಾಡಿ, ಎಡೆ ಸಹಿತವಾಗಿ ಅಮ್ಮನನ್ನು ಹರಿಜನ ಕಾಲನಿಯ ಎಲ್ಲರೂ ಒಂದೇ ಕಡೆ ಅಮ್ಮನನ್ನು (ಕೇಲು) ತಂದಿಟ್ಟು, ಪೂಜಿಸುತ್ತಾರೆ. ನಂತರ ಅವುಗ&zwj;ಳನ್ನು ಒಟ್ಟಿಗೆ ಭಜನೆ, ಮೆರವಣಿಗೆಯಲ್ಲಿ ಕೊಂಡೊಯ್ದು ಗ್ರಾಮದ ಗಡಿಭಾಗಕ್ಕೆ ಇಟ್ಟು ಬರುವ ಪದ್ಧತಿಯಂತೆ ಶುಕ್ರವಾರವೂ ಆಚರಿಸಲಾಯಿತು.&lt;/p&gt;&lt;h3&gt;ಬಸವಾಪಟ್ಟಣ ಪೊಲೀಸರು ಬರುತ್ತಿದ್ದಂತೆ ಹಗ್ಗ ಬಿಚ್ಚಿದ ಗ್ರಾಮಸ್ಥರು&lt;/h3&gt;&lt;p&gt;ಈ ವೇಳೆ ಬಸವಾಪಟ್ಟಣ ಪೊಲೀಸರು ವಾಹನ ಬರುತ್ತಿರುವುದನ್ನು ಗಮನಿಸಿ, ಹಗ್ಗ ಬಿಚ್ಚಿದ್ದಾರೆ. ನಂತರ ಹಲ್ಲೆಗೆ ಒಗೊಳಗಾದ ಯುವಕರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣಕ್ಕೂ ಕಾರಣವಾಯಿತು.&lt;/p&gt;&lt;p&gt;ಶನಿವಾರ ಬೆಳಲಗೆರೆ ಗ್ರಾಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಗ್ರಾಮಸ್ಥರ ಸಭೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಿದರು. ಇನ್ನು ಮುಂದೆ ಗ್ರಾಮದ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹಾಕಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದರು. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸದ್ಯಕ್ಕೆ ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belalagere-villagers-assault-dalits-who-visited-a-temple-incident-reported-in-davanagere-rav/articleshow-d43rx8l"/>
        </item>
        <item>
            <title><![CDATA[ದಾವಣಗೆರೆ ಜಿಲ್ಲಾಸ್ಪತ್ರೆ  OTಯಲ್ಲಿ ಭಾರೀ ಸ್ಫೋಟ, ರೋಗಿಗಳನ್ನು ಸ್ಟ್ರೆಚರ್ ನಲ್ಲಿ ಹೊರತಂದು ಪ್ರಾಣ ಉಳಿಸಿದ ಸಿಬ್ಬಂದಿ!]]></title>
            <link>https://kannada.asianetnews.com/karnataka-districts/davanagere-hospital-blast-anaesthesia-cylinder-explosion-destroys-two-ots-at-chigateri-district-hospital-gdp/articleshow-de9anvo</link>
            <guid isPermaLink="true">https://kannada.asianetnews.com/karnataka-districts/davanagere-hospital-blast-anaesthesia-cylinder-explosion-destroys-two-ots-at-chigateri-district-hospital-gdp/articleshow-de9anvo</guid>
            <pubDate>Tue, 30 Jun 2026 13:32:20 +0530</pubDate>
            <description><![CDATA[ದಾವಣಗೆರೆಯ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್&zwnj;ನಲ್ಲಿ ಅನೆಸ್ತೇಶಿಯಾ ಸಿಲಿಂಡರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ನಾಶವಾಗಿದ್ದರೂ, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kwbradpvzs85h920d0zbc4w5,imgname-davanagere-hospital-blast-1782806034138.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಇಲ್ಲಿನ ಪ್ರತಿಷ್ಠಿತ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಆಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯ (Operation Theater) ಅನೆಸ್ತೇಶಿಯಾ ವರ್ಕ್ ಸ್ಟೇಷನ್&zwnj;ನಲ್ಲಿ (Anaesthesia Workstation) ಅನಿಲ ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಎರಡು ಆಪರೇಷನ್ ಥಿಯೇಟರ್&zwnj;ಗಳಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿದ್ದರೂ, ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸದೆ ಇಡೀ ಆಸ್ಪತ್ರೆ ನಿಟ್ಟುಸಿರು ಬಿಟ್ಟಿದೆ.&lt;/p&gt;&lt;h2&gt;ಬೆಳಗ್ಗೆ 8.30ಕ್ಕೆ ಸಂಭವಿಸಿದ ದುರಂತ&lt;/h2&gt;&lt;p&gt;ಇಂದು ಬೆಳಗ್ಗೆ ಸುಮಾರು 8:30ರ ವೇಳೆಗೆ ಚಿಗಟೇರಿ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ ಸಂಖ್ಯೆ 5 ಮತ್ತು 6 ರಲ್ಲಿ ಸಿಬ್ಬಂದಿ ಎಂದಿನಂತೆ ಕರ್ತವ್ಯ ನಿರತರಾಗಿದ್ದರು. ಈ &amp;nbsp;ವೇಳೆ ಅನೆಸ್ತೇಶಿಯಾ ವರ್ಕಿಂಗ್ ಸ್ಟೇಷನ್&zwnj;ನಲ್ಲಿ &amp;nbsp;ಇದ್ದಕ್ಕಿದ್ದಂತೆಯೇ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಕಿಡಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಅಲ್ಲಿದ್ದ ನೈಟ್ರಸ್ ಆಕ್ಸೈಡ್ (Nitrous Oxide) ಸಿಲಿಂಡರ್ ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ. ಸಾಮಾನ್ಯವಾಗಿ ಅನೆಸ್ತೇಶಿಯಾ ವರ್ಕ್ ಸ್ಟೇಷನ್&zwnj;ನಲ್ಲಿ ನೈಟ್ರಸ್ ಆಕ್ಸೈಡ್ ಮತ್ತು ಆಕ್ಸಿಜನ್ (Oxygen) ಎಂಬ ಎರಡು ಸಿಲಿಂಡರ್&zwnj;ಗಳಿರುತ್ತವೆ. ಇದರಲ್ಲಿ ನೈಟ್ರಸ್ ಆಕ್ಸೈಡ್ ಅತ್ಯಂತ ದಹನಕಾರಿ (Inflammable) ಅನಿಲವಾಗಿದ್ದರಿಂದ, ಬೆಂಕಿ ತಗುಲಿದ ತಕ್ಷಣ ಇಡೀ ಕೊಠಡಿ ತುಂಬಾ ಜ್ವಾಲೆ ವ್ಯಾಪಿಸಿದೆ.&lt;/p&gt;&lt;h2&gt;ಸಿಬ್ಬಂದಿಯ ಸಮಯಪ್ರಜ್ಞೆ: ಪ್ರಾಣ ಉಳಿಸಿಕೊಂಡ ಜನ&lt;/h2&gt;&lt;p&gt;ಸ್ಫೋಟ ಸಂಭವಿಸಿದಾಗ ಕೊಠಡಿಯ ಒಳಗೆ ಹತ್ತಕ್ಕೂ ಹೆಚ್ಚು ಜನ ವೈದ್ಯಕೀಯ ಸಿಬ್ಬಂದಿ ಇದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಒಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ಆಸ್ಪತ್ರೆಯ 'ಡಿ ಗ್ರೂಪ್' (D-Group) ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಆಪರೇಷನ್ ಥಿಯೇಟರ್ ಒಳಗೆ ಸಿಲುಕಿದ್ದ ಸಹೋದ್ಯೋಗಿಗಳನ್ನು ರಕ್ಷಿಸಿ ಹೊರತಂದಿದ್ದಾರೆ. ಡಿ ಗ್ರೂಪ್ ಸಿಬ್ಬಂದಿಯ ಈ ಧೈರ್ಯ ಮತ್ತು ಅದ್ಭುತ ಕಾರ್ಯವನ್ನು ನೆನೆದು ಅಲ್ಲಿದ್ದ ಹಿರಿಯ ನರ್ಸ್ ಒಬ್ಬರು ಭಾವುಕರಾದರು.&lt;/p&gt;&lt;h2&gt;ರೋಗಿಗಳಲ್ಲಿ ಹೆಚ್ಚಿದ ಆತಂಕ: ಧೈರ್ಯ ತುಂಬಿದ ವೈದ್ಯರು&lt;/h2&gt;&lt;p&gt;ಆಪರೇಷನ್ ಥಿಯೇಟರ್&zwnj;ನಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಶಸ್ತ್ರಚಿಕಿತ್ಸಾ ಕೊಠಡಿಯ ಅಕ್ಕಪಕ್ಕದ ವಾರ್ಡ್&zwnj;ಗಳಲ್ಲಿದ್ದ ರೋಗಿಗಳು ಭಯದಿಂದ ತಕ್ಷಣವೇ ಕಟ್ಟಡದಿಂದ ಕೆಳಗೆ ಓಡಿ ಬಂದರು. ಇನ್ನು ಕೆಲವರನ್ನು ಸ್ಟ್ರೆಚರ್&zwnj; ನಲ್ಲಿ ಕೆಳಗೆ ತರಲಾಯ್ತು. ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ ಆಸ್ಪತ್ರೆಯ ವೈದ್ಯರು ಮತ್ತು ಹಿರಿಯ ಅಧಿಕಾರಿಗಳು, ರೋಗಿಗಳಿಗೆ ಧೈರ್ಯ ತುಂಬಿ ಸುರಕ್ಷಿತವಾಗಿ ಮರಳಿ ವಾರ್ಡ್&zwnj;ಗಳಿಗೆ ಕಳುಹಿಸಿಕೊಟ್ಟರು.&lt;/p&gt;&lt;h2&gt;ಸುಟ್ಟು ಭಸ್ಮವಾದ ಯಂತ್ರೋಪಕರಣಗಳು&lt;/h2&gt;&lt;p&gt;ಸ್ಫೋಟದ ತೀವ್ರತೆಗೆ ಆಪರೇಷನ್ ಥಿಯೇಟರ್ 5 ಮತ್ತು 6 ರಲ್ಲಿದ್ದ ಬೆಡ್&zwnj;ಗಳು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಸೇರಿದಂತೆ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಫೋಟದ ನಂತರ ಇಡೀ ಶಸ್ತ್ರಚಿಕಿತ್ಸಾ ಬ್ಲಾಕ್&zwnj;ನಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ, ಕಾರಿಡಾರ್&zwnj;ನಲ್ಲಿ ತುಂಬಿದ್ದ ಹೊಗೆಯನ್ನು ನಿಯಂತ್ರಣಕ್ಕೆ ತಂದರು.&lt;/p&gt;&lt;h2&gt;ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಭೇಟಿ&lt;/h2&gt;&lt;p&gt;ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ದಾವಣಗೆರೆ ಜಿಲ್ಲಾಧಿಕಾರಿ (DC) ಜಿ.ಎಂ. ಗಂಗಾಧರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, &quot;ಅನೆಸ್ತೇಶಿಯಾ ವರ್ಕ್ ಸ್ಟೇಷನ್&zwnj;ನಲ್ಲಿ ಸ್ಫೋಟ ಸಂಭವಿಸಿದ್ದು, ಹಲವು ಯಂತ್ರೋಪಕರಣಗಳು ಹಾನಿಗೊಳಗಾಗಿವೆ. ಅದೃಷ್ಟವಶಾತ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲಾ ಸರ್ಜನ್ ಹಾಗೂ ಡಿಹೆಚ್&zwnj;ಒ (DHO) ಅವರಿಗೆ ಸ್ಥಳದಲ್ಲೇ ಇದ್ದು ಪರಿಸ್ಥಿತಿಯನ್ನು ಅವಲೋಕಿಸಲು ಸೂಚಿಸಿದ್ದೇನೆ. ಆಸ್ಪತ್ರೆಗೆ ಆಪರೇಷನ್ ಥಿಯೇಟರ್ ಅತ್ಯಗತ್ಯವಾಗಿರುವುದರಿಂದ, ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ಮತ್ತು ಅಗ್ನಿಶಾಮಕ ಅಧಿಕಾರಿಗಳ ತಂಡದಿಂದ ಜಂಟಿ ಪರಿಶೀಲನೆ ನಡೆಸಿ ಒಂದು ವಾರದೊಳಗೆ ಇದನ್ನು ಸರಿಪಡಿಸಿಕೊಡಲಾಗುವುದು. ಪ್ರಾಥಮಿಕ ಮಾಹಿತಿಯ ಪ್ರಕಾರ ಇದು ತಾಂತ್ರಿಕ ದೋಷದಿಂದ ಆಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ&quot; ಎಂದರು.&lt;/p&gt;&lt;h2&gt;ಆಂತರಿಕ ತನಿಖೆಗೆ ಆದೇಶಿಸಿದ ಜಿಲ್ಲಾ ಸರ್ಜನ್&lt;/h2&gt;&lt;p&gt;ಘಟನೆಗೆ ನಿಖರವಾದ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಆಸ್ಪತ್ರೆಯ ವತಿಯಿಂದ ಸಮಗ್ರ ಆಂತರಿಕ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಸರ್ಜನ್ ಡಾ. ಎಂ.ಬಿ. ನಾಗೇಂದ್ರಪ್ಪ ತಿಳಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಆಸ್ಪತ್ರೆಯ ಇತರೆ ವಿಭಾಗ ಎಂದಿನಂತೆ ನಡೆಯುತ್ತಿದೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/davanagere-hospital-blast-anaesthesia-cylinder-explosion-destroys-two-ots-at-chigateri-district-hospital-gdp/articleshow-de9anvo"/>
        </item>
        <item>
            <title><![CDATA[ಕರಾಳ ರಹಸ್ಯ ಬಯಲು; ಜಿಮ್-ಫಿಟ್ನೆಸ್ ಅನ್ನೋ ಹೆಣ್ಮಕ್ಕಳೇ ಇನ್ನಾದ್ರೂ ಎಚ್ಚೆತ್ತುಕೊಳ್ಳಿ!]]></title>
            <link>https://kannada.asianetnews.com/karnataka-districts/davanagere-gym-owner-trainer-blackmailed-young-women-housewives-who-came-for-training-extorted-lakhs-of-rupees-mrq/articleshow-dnn4q4g</link>
            <guid isPermaLink="true">https://kannada.asianetnews.com/karnataka-districts/davanagere-gym-owner-trainer-blackmailed-young-women-housewives-who-came-for-training-extorted-lakhs-of-rupees-mrq/articleshow-dnn4q4g</guid>
            <pubDate>Sat, 11 Jul 2026 07:10:13 +0530</pubDate>
            <description><![CDATA[&lt;p&gt;ಜಿಮ್ ಮಾಲೀಕ ಮತ್ತು ತರಬೇತುದಾರನೊಬ್ಬ, ತರಬೇತಿಗೆ ಬರುತ್ತಿದ್ದ ಯುವತಿಯರು ಮತ್ತು ಗೃಹಿಣಿಯರಿಗೆ ಬ್ಲ್ಯಾಕ್&zwnj;ಮೇಲ್ ಮಾಡಿ, ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ತನ್ನ ನಿಜವಾದ ಗುರುತು ಮುಚ್ಚಿಟ್ಟು, ಸಿಸಿ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಹಿಡಿದು ಹೆಣ್ಣುಮಕ್ಕಳ ಜೀವನದೊಂದಿಗೆ ಆಟವಾಡುತ್ತಿದ್ದ ಈ ಘಟನೆಯು, ಜಿಮ್&zwnj;ಗಳಿಗೆ ಮಹಿಳೆಯರನ್ನು ಕಳುಹಿಸುವಾಗ ಎಚ್ಚರಿಕೆ ವಹಿಸುವಂತೆ ಒತ್ತಿ ಹೇಳುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt8x9h412x1pya4y43by91ep,imgname-kerala-islam-friendly-gym-palakkad-controversy-owner-clarifies-social-backlash-fitness-center---22-1780563100801.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &amp;nbsp;&lt;/strong&gt;ಜಿಮ್&zwnj; ಮತ್ತು ಫಿಟ್ನೆಸ್&zwnj; ಸೆಂಟರ್&zwnj;ಗೆ ಹೋಗುತ್ತಿದ್ದೇನೆಂದು ಹೇಳುತ್ತಿದ್ದ ವಿದ್ಯಾರ್ಥಿನಿಯರು, ಯುವತಿಯರು, ಗೃಹಿಣಿಯರು ಇನ್ನು ಜೀವನದಲ್ಲೇ ಅದರ ಹೆಸರು ಎತ್ತದಂತಹ ಘಟನೆಗಳು ದಾವಣಗೆರೆಯಲ್ಲಿ ಬೆಳಕಿಗೆ ಬರುತ್ತಿರುವುದು ಜಿಮ್ ಮತ್ತು ಫಿಟ್ನೆಸ್ ಮಾಲೀಕರಿಗೂ ಅಂತಿಮ ಎಚ್ಚರಿಕೆಯ ಗಂಟೆಯಾಗಿದೆ!&lt;/p&gt;&lt;p&gt;ಹೌದು, ಇಲ್ಲಿನ ಕೆಟಿಜೆ ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್&zwnj;ವೊಂದರ ಮಾಲೀಕ ಕಂ ತರಬೇತುದಾರ ಮಾಡಿರುವ ಪೈಶಾಚಿಕ ಕೃತ್ಯದಿಂದಾಗಿ ಜಿಮ್ ಮತ್ತು ಫಿಟ್ನೆಸ್ ಅಂತೆಲ್ಲಾ ಹೋಗುತ್ತಿದ್ದ ಅದೆಷ್ಟೋ ವಿದ್ಯಾರ್ಥಿನಿಯರು, ಯುವತಿಯರು, ಗೃಹಿಣಿಯರು ಹೀಗೆ ಫಿಟ್ನೆಸ್ ಅಂತೆಲ್ಲಾ ಯೋಚಿಸಲು ಹಿಂದೇಟು ಹಾಕುವಂತಾಗಿದೆ. ಕೇವಲ ಇದೊಂದೇ ಜಿಮ್&zwnj;, ಫಿಟ್ನೆಸ್ ಸೆಂಟರ್ ಕಥೆಯಲ್ಲ. ಬಗೆಯುತ್ತಾ ಹೋದಂತೆ ಭಿನ್ನವಾಗೇನೂ ಇಲ್ಲವೆಂಬುದನ್ನೂ ಜನ ಒಪ್ಪುತ್ತಾರೆ.&lt;/p&gt;&lt;p&gt;ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾದಿತ ಜಿಮ್ ಮಾಲೀಕ ಅಲ್ಲಿಗೆ ಬರುತ್ತಿದ್ದ ಕೆಲ ಯುವತಿಯರು, ಗೃಹಿಣಿಯರ ಜೊತೆಗೆ ದುರ್ವ್ಯವಹಾರ ಮಾಡಿದ್ದಲ್ಲೇ ಆ ಹೆಣ್ಣುಮಕ್ಕಳಿಗೆ ಬ್ಲ್ಯಾಕ್ ಮೇಲ್ ಮಾಡಿ, ಲಕ್ಷಗಟ್ಟಲೇ ದುಡ್ಡು ವಸೂಲು ಮಾಡಿದ್ದಾನೆ. ಅಲ್ಲದೇ, ತಾನು ಕರೆದಾಗಲೆಲ್ಲಾ ಬರಬೇಕೆಂಬುದಾಗಿ ಬೆದರಿಕೆ ಸಹ ಹಾಕುತ್ತಿದ್ದ ಎಂಬುದಾಗಿ ಹಿಂದೂ ಪರ ಸಂಘಟನೆಗಳ ಮುಖಂಡರು ಆರೋಪಿಸಿರುವುದೇ ಜಿಮ್ ಮತ್ತು ಫಿಟ್ನೆಸ್ ಸೆಂಟರ್&zwnj;ಗಳ ಕರಾಳ ಮುಖಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈಗ ಕೆಲವರು ರಾತ್ರೋರಾತ್ರಿ ಊರು ಬಿಟ್ಟಿದ್ದರೆ, ಮತ್ತೆ ಕೆಲ ಸಂಸಾರಗಳಿಗೂ ಬೀದಿಗೆ ಬೀಳುವಂತಾಗಿದೆ ಎಂದು ಹೇಳಲಾಗುತ್ತಿದೆ.&lt;/p&gt;&lt;h2&gt;&lt;strong&gt;ಸೆಂಟರ್ ಸಿಸಿ ಕ್ಯಾಮೆರಾಗಳೇ ಸಾಕ್ಷಿ:&lt;/strong&gt;&lt;/h2&gt;&lt;p&gt;ವಿವಾದಿತ ಜಿಮ್&zwnj;ನ ಮಾಲೀಕ ಕಂ ಟ್ರೈನರ್ ಹಿಂದೆ ಕೆಲಸ ಮಾಡುತ್ತಿದ್ದ ಕಡೆಯೂ ಹೀಗೆಯೇ ಮಾಡಿ, ತಾನೇ ಸ್ವಂತವಾಗಿ ಸೆಂಟರ್ ಆರಂಭಿಸಿದ್ದ ಎನ್ನಲಾಗಿದೆ. ತರಬೇತಿ ಹೆಸರಿನಲ್ಲಿ ತಮ್ಮ ಸೆಂಟರ್&zwnj;ಗೆ ಬಂದ ಹೆಣ್ಣುಮಕ್ಕಳು, ಯುವತಿಯರೊಂದಿಗೆ ತನ್ನ ನೈಜ ಹೆಸರನ್ನು, ಧರ್ಮವನ್ನು, ತನಗೆ ಮದುವೆಯಾಗಿ, ಮೂವರು ಮಕ್ಕಳಿರುವುದು, ತನ್ನ ಪತ್ನಿ ಗರ್ಭಿಣಿ ಆಗಿರುವುದನ್ನೂ ಬಚ್ಚಿಟ್ಟು, ತನ್ನ ಫಿಟ್ನೆಸ್ ಸೆಂಟರ್&zwnj;ಗೆ ಬಂದ ಹೆಣ್ಣುಮಕ್ಕಳಿಗೆ ಗಾಳ ಹಾಕುತ್ತಿದ್ದ. ಹೀಗೆ ಗಾಳ ಹಾಕಿದ ಹೆಣ್ಣುಮಕ್ಕಳನ್ನು ಹರಿದು ಮುಕ್ಕುತ್ತಿದ್ದ ಎಂಬ ಆರೋಪ ಕೇಳಿಬರುತ್ತಿದೆ. ಅದನ್ನು ಆತನ ಸೆಂಟರ್ ಸಿಸಿ ಕ್ಯಾಮೆರಾಗಳೇ ಪುಷ್ಟೀಕರಿಸುತ್ತಿವೆ.&lt;/p&gt;&lt;p&gt;ಪರ್ಸನಲ್ ಟ್ರೈನರ್ ಆಗಿ, ವಿಶೇಷವಾಗಿ ಹೇಳಿಕೊಡುವುದಾಗಿ ವಿದ್ಯಾರ್ಥಿನಿಯರು, ಯುವತಿಯರನ್ನು, ಗೃಹಿಣಿಯರನ್ನು ಬಲೆಗೆ ಬೀಳಿಸಿಕೊಂಡು, ಅವರೊಂದಿಗೆ ಸಲುಗೆ ಬೆಳೆಸಿಕೊಂಡ ದುಷ್ಕರ್ಮಿರು ಆ ಹೆಣ್ಣು ಮಕ್ಕಳ ಜೀವನದೊಂದಿಗೆ ಆಟವಾಡಿರುವುದು ಆತನದೇ ಫಿಟ್ನೆಸ್ ಸೆಂಟರ್&zwnj;ನ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಆತನ ಮೊಬೈಲ್&zwnj;ಗಳಲ್ಲೂ ಅದನ್ನೆಲ್ಲಾ ಇಟ್ಟುಕೊಂಡು, ಹಣಕ್ಕಾಗಿ ಪೀಡಿಸುವುದು, ತಾನು ಕರೆದಾಗಲೆಲ್ಲಾ ಬರಬೇಕೆಂಬುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದನ್ನು ನೋಡಿದರೆ ಜಿಮ್ ಮತ್ತು ಫಿಟ್ನೆಸ್ ಸೆಂಟರ್&zwnj;ಗಳಿಗೆ ಹೆಣ್ಣುಮಕ್ಕಳನ್ನು ಕಳಿಸುವ ಮುನ್ನ ನೂರು ಸಲ ಹೆತ್ತವರು, ಕುಟುಂಬದವರು ಆಲೋಚಿಸುವಂತಾಗಿದೆ. ಇನ್ನು ಇನ್ಸ್ಟಾಗ್ರಾಂನಲ್ಲೂ ಕೆಲ ಹೆಣ್ಣುಮಕ್ಕಳ ಜೊತೆಗಿರುವ ವೀಡಿಯೋಗಳನ್ನು ಒಪ್ಪಿಗೆಯೇ ಇಲ್ಲದೇ ಆತ ಹಾಕಿದ್ದಾನೆಂಬ ಮಾತು ಕೇಳಿಬರುತ್ತಿವೆ.&lt;/p&gt;&lt;p&gt;ಜಿಮ್&zwnj; ಮತ್ತು ಫಿಟ್ನೆಸ್ ಸೆಂಟರ್&zwnj;ಗಳಲ್ಲಿ ಏನೆಲ್ಲಾ ಆಗುತ್ತಿದೆಯೆಂಬುದು ಯಾವುದೂ ರಹಸ್ಯವಾಗಿಯೇನೂ ಇಲ್ಲ. ಆದರೆ, ಹೆಣ್ಣು ಮಕ್ಕಳ ಬದುಕು, ಗೌರವ, ಕುಟುಂಬದ ಮರ್ಯಾದೆಗೆ ಅಂಜಿ ಯಾರೂ ಕೇಸ್ ದಾಖಲಿಸಲು ಮುಂದಾಗುವುದಿಲ್ಲ. ಅಲ್ಲದೇ. ಇಂತಹ ಜಿಮ್-ಫಿಟ್ನೆಸ್ ಸೆಂಟರ್&zwnj;ಗಳ ಕೆಲ ಮಾಲೀಕರು, ತರಬೇತುದಾರರು, ಪರ್ಸನಲ್ ಟ್ರೈನರ್&zwnj; (ಪಿಟಿ)ಗಳ ಕುಕೃತ್ಯದಿಂದ ಅದೆಷ್ಟೋ ಸಂಸಾರಗಳು ಬೀದಿಪಾಲಾಗುವಂತಾಗಿದೆ. ಇಂತಹವರಿಗೆ ಪ್ರತಿಷ್ಟಿತ ಕುಟುಂಬದ ಹೆಣ್ಣುಮಕ್ಕಳು, ಉದ್ಯಮಿಗಳು, ದೊಡ್ಡ ಹುದ್ದೆಯಲ್ಲಿದ್ದವರು, ಪ್ರಭಾವಿ ರಾಜಕಾರಣಿಗಳ ಕುಟುಂಬದ ಹೆಣ್ಣುಮಕ್ಕಳೇ ಟಾರ್ಗೆಟ್ ಅಂತೇನೂ ಬೇರೆಯಾಗಿ ಹೇಳಬೇಕಿಲ್ಲ.&lt;/p&gt;&lt;p&gt;ತಡರಾತ್ರಿ 12.03ರ ವೇಳೆ ಜಿಮ್ ಮತ್ತು ಫಿಟ್ನೆಸ್ ಸೆಂಟರ್&zwnj;ಗೆ ಹೆಣ್ಣು ಮಕ್ಕಳಿಗೆ ಬ್ಲ್ಯಾಕ್ ಮೇಲ್ ಮಾಡಿ, ಕರೆಸಿಕೊಂಡು ಸಿಸಿ ಕ್ಯಾಮೆರಾ ಆಫ್ ಮಾಡಲಾಗಿದೆಯೆಂದು ನಂಬಿಸಿ, ಅಂತಹವರ ಜೊತೆಗೆ ಸೇರುವ ದೃಶ್ಯಗಳನ್ನು ಅದೇ ಸಿಸಿ ಕ್ಯಾಮೆರಾದಲ್ಲಿ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿರುವ ಇಂತಹ ದುಷ್ಕರ್ಮಿಗಳಿಗೆ ಮನೆಯಲ್ಲಿ ತಾಯಿ, ಅಕ್ಕ, ತಂಗಿಯರು, ಹೆಣ್ಣುಮಕ್ಕಳು ಇಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಮತ್ತೊಬ್ಬರ ಮನೆಯ ಹೆಣ್ಣುಮಕ್ಕಳ ಜೊತೆಗೆ ಹೀಗೆ ವರ್ತಿಸುವ ದುಷ್ಕರ್ಮಿಗಳ ಮನೆಯಲ್ಲೂ ಹೆಣ್ಣುಮಕ್ಕಳಿರುತ್ತಾರೆ. ಅಂತಹವರ ಜೊತೆಗೆ ಬೇರೆ ಯಾರಾದರೂ ಹೀಗೆ ವರ್ತಿಸಿದರೆ, ಬ್ಲ್ಯಾಕ್ ಮೇಲ್ ಮಾಡಿದರೆ, ತಡರಾತ್ರಿ ಬರುವಂತೆ ಹೇಳಿದರೆ ತನಗೆ ಏನನಿಸುತ್ತದೆಂಬ ಅರಿವು ಇಲ್ಲವೇ ಎಂಬುದು ಹೆಸರು ಹೇಳಲಿಚ್ಛಿಸದ ಮಹಿಳೆಯರ ಪ್ರಶ್ನೆಯಾಗಿದೆ.&lt;/p&gt;&lt;h3&gt;&lt;strong&gt;ಪೊಲೀಸ್&zwnj; ಕೈಯಲ್ಲೇ ದೃಶ್ಯ, ಸುಮೋಟೋ ಕೇಸ್ ಯಾಕಿಲ್ಲ?!&lt;/strong&gt;&lt;/h3&gt;&lt;p&gt;ಮೊಬೈಲ್&zwnj;ನಲ್ಲಿ ಫೋಟೋ, ಸಿಸಿ ಕ್ಯಾಮೆರಾ ದೃಶ್ಯ, ಹಿಡನ್ ಕ್ಯಾಮೆರಾ ದೃಶ್ಯಗಳು ಪೊಲೀಸರ ಕೈಯಲ್ಲೇ ಇವೆ. ಆದರೆ, ಸಂತ್ರಸ್ಥರು, ಕುಟುಂಬದವರು ದೂರು ನೀಡುವವರೆಗೂ ಕಾಯುತ್ತ ನೊಂದವರಿಗೆ ನ್ಯಾಯ ಕೊಡಿಸಬೇಕಾದ ಪೊಲೀಸ್ ಇಲಾಖೆಯೇ ಕೈಚೆಲ್ಲುತ್ತಿರುವುದು ಜನರ ಬೇಸರಕ್ಕೂ ಕಾರಣವಾಗುತ್ತಿದೆ.&lt;/p&gt;&lt;p&gt;ಜಿಲ್ಲಾ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸುವ ಅವಶ್ಯಕತೆ ಇದೆ. ಹಿಂದೂ ಹೆಣ್ಣು ಮಕ್ಕಳನ್ನೇ ಟಾರ್ಗೆಟ್ ಮಾಡುವ ಲವ್ ಜಿಹಾದ್ ಪ್ರಕರಣ ಇದೆಂಬ ಆರೋಪ ಕೇಳಿಬರುತ್ತಿವೆ. ವಾಸ್ತವದಲ್ಲೂ ಹೀಗೆ ಜಿಮ್&zwnj; ಮತ್ತು ಫಿಟ್ನೆಸ್ ಸೆಂಟರ್&zwnj;ಗಳಿಗೆಂದು ಹೋಗುವವರು ಒಂದು ಸಮುದಾಯದವರೆಂಬುದೂ ಅಷ್ಟೇ ಸತ್ಯ. ಅನ್ಯ ಕೋಮಿನವರು ಹೀಗೆಲ್ಲಾ ದಾವಣಗೆರೆಯಲ್ಲಿ ಬರುವುದೇ ವಿರಳ ಎನ್ನಲಾಗುತ್ತಿದೆ.&lt;/p&gt;&lt;p&gt;ಆಕಸ್ಮಾತ್ ಹೋದರೂ 3-4 ದಿನಕ್ಕೆ ಆ ಸಮುದಾಯದವರೇ ಹೋಗದಂತೆ ಮುಲಾಜಿಲ್ಲದೇ ಹೇಳಿ ತಡೆಯುತ್ತಾರೆಂದರೆ ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಹೆಸರಿನಲ್ಲಿ ಏನೆಲ್ಲಾ ಆಗುತ್ತದೆಂಬುದು ನಿರ್ದಿಷ್ಟ ಸಮುದಾಯದವರಿಗೆ ಗೊತ್ತಿದೆಯೆಂದೇ ಅರ್ಥವಲ್ಲವೇ? ಇನ್ನಾದರೂ ಜಿಮ್&zwnj; ಮತ್ತು ಫಿಟ್ನೆಸ್ ಅಂತೆಲ್ಲಾ ಹೋಗುವ ನಿಮ್ಮ ನಿಮ್ಮ ಮನೆಯ ಹೆಣ್ಣುಮಕ್ಕಳ ಗೌರವ, ಜೀವ, ಜೀವನಕ್ಕೆ ಅಪಾಯವಾಗದಂತೆ ಆಯಾ ಮನೆಯವರು, ಹೆತ್ತವರು, ಕುಟುಂಬ ಸದಸ್ಯರು ಗಮನಹರಿಸುವಂತೆ ಕೆಲ ಸಂಘಟನೆ ಮುಖಂಡರು ಸಲಹೆ ನೀಡುತ್ತಾರೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-gym-owner-trainer-blackmailed-young-women-housewives-who-came-for-training-extorted-lakhs-of-rupees-mrq/articleshow-dnn4q4g"/>
        </item>
        <item>
            <title><![CDATA[ದಾವಣಗೆರೆ: ಅಭಿಮಾನಿಗಳಿಂದಲೇ ₹4.74 ಲಕ್ಷ ಮೊತ್ತದ ಟಾಕ್ಸಿಕ್ ಸಿನಿಮಾದ ಟಿಕೆಟ್ ಖರೀದಿ]]></title>
            <link>https://kannada.asianetnews.com/karnataka-districts/davanagere-rocking-star-yash-fans-buy-tickets-for-toxic-movie-worth-rs-4-point-74-lakh-mrq/articleshow-gru0dqg</link>
            <guid isPermaLink="true">https://kannada.asianetnews.com/karnataka-districts/davanagere-rocking-star-yash-fans-buy-tickets-for-toxic-movie-worth-rs-4-point-74-lakh-mrq/articleshow-gru0dqg</guid>
            <pubDate>Wed, 26 Aug 2026 05:53:02 +0530</pubDate>
            <description><![CDATA[ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅವರ ಅಭಿಮಾನಿಗಳ ಸಂಘವು ಸಂಭ್ರಮಾಚರಣೆ ಹಮ್ಮಿಕೊಂಡಿದೆ. ತ್ರಿಶೂಲ್ ಮತ್ತು ತ್ರಿನೇತ್ರ ಚಿತ್ರಮಂದಿರಗಳಲ್ಲಿ ಬೆಳಗಿನ ಜಾವ ಫ್ಯಾನ್ ಶೋ ಆಯೋಜಿಸಲಾಗಿದ್ದು, ಅಭಿಮಾನಿಗಳೇ ಲಕ್ಷಾಂತರ ರೂಪಾಯಿ ಮೌಲ್ಯದ ಟಿಕೆಟ್&zwnj;ಗಳನ್ನು ಖರೀದಿಸಿ ವಿಜಯೋತ್ಸವಕ್ಕೆ ಸಜ್ಜಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0xq422kf2esd2xm4wc0yg72,imgname-davanagere-yasg-fans-1787703724115.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ರಾಕಿಂಗ್ ಸ್ಟಾರ್ ಖ್ಯಾತಿಯ ಯಶ್ ಅಭಿನಯದ ಟಾಕ್ಸಿಕ್ ಚಿತ್ರ ಆ. 26 ರಂದು ಬಿಡುಗಡೆ ಪ್ರಯುಕ್ತ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಸಂತೋಷ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ವರ್ಷಗಳದಿಂದ ಟಾಕ್ಸಿಕ್ ಚಿತ್ರದ ಬಿಡುಗಡೆಯನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದರು.&lt;/p&gt;&lt;p&gt;ತ್ರಿನೇತ್ರ, ತ್ರಿಶೂಲ್, ಗೀತಾಂಜಲಿ ಹಾಗೂ ಎಸ್&zwnj;ಎಸ್ ಮಾಲ್&zwnj;ನಲ್ಲಿ ಟಾಕ್ಸಿಕ್ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಸಂತೋಷ ಉಂಟು ಮಾಡಿದೆ ಎಂದರು.&lt;/p&gt;&lt;h2&gt;&lt;strong&gt;ಒಟ್ಟು ₹4.74 ಲಕ್ಷ ಮೊತ್ತದ ಟಿಕೆಟ್ ಖರೀದಿ&lt;/strong&gt;&lt;/h2&gt;&lt;p&gt;ತ್ರಿಶೂಲ್ ಮತ್ತು ತ್ರಿನೇತ್ರ ಚಿತ್ರಮಂದಿರದಲ್ಲಿ ಬೆಳಗಿನ ಜಾವ 6ಕ್ಕೆ ಫ್ಯಾನ್ ಶೋ ನಡೆಯುತ್ತಿದೆ. 5.30ಕ್ಕೆ ಎರಡೂ ಚಿತ್ರಮಂದಿರಗಳ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ, ಸಂಭ್ರಮೋತ್ಸವ ನಡೆಸಲಾಗುವುದು. ಫ್ಯಾನ್ ಷೋಗಾಗಿ ಎರಡೂ ಚಿತ್ರಮಂದಿರಗಳ ಟಿಕೆಟ್&zwnj;ಗಳನ್ನು ಅಭಿಮಾನಿಗಳೇ ಖರೀದಿ ಮಾಡಿದ್ದೇವೆ. ಒಟ್ಟು ₹4.74 ಲಕ್ಷ ಮೊತ್ತದ ಟಿಕೆಟ್ ಖರೀದಿಸಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;ಯಶ್ ಅಭಿನಯದ ಚಿತ್ರ ಬಿಡುಗಡೆಗೆ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಾ ಇದ್ದೇವೆ. ಅತಿ ಹೆಚ್ಚಿನ ಬಜೆಟ್&zwnj;ನ ಚಿತ್ರ ಖಂಡಿತವಾಗಿಯೂ ಯಶಸ್ವಿ ಆಗುತ್ತದೆ ಎಂಬ ವಿಶ್ವಾಸ ಇದೆ. ಮುಂದಿನ ದಿನಗಳಲ್ಲಿ ಯಶ್ ಅವರ ಅಪೇಕ್ಷೆಯಂತೆ ಸಾಮಾಜಿಕ ಸೇವಾ ಕಾರ್ಯಗಳ ಮಾಡಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;12 ಸಾವಿರಕ್ಕೂ ಹೆಚ್ಚು ಸ್ಕ್ರೀನ್&zwnj;ಗಳಲ್ಲಿ ಟಾಕ್ಸಿಕ್ ರಿಲೀಸ್; ಧುರಂದರ್ ದಾಖಲೆ ಉಡೀಸ್&lt;/strong&gt;&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಅಭಿಮಾನಿಗಳ ಸಂಘದ ನರೇಶ್, ವಿನಯ್ ಕುಮಾರ್, ಸಂದೀಪ್, ರಾಕೇಶ್ ಕುಮಾರ್, ಸಚಿನ್, ಶಿವು, ವಿಜಯ್, ನರೇಂದ್ರ, ವೀರೇಂದ್ರ, ಮೋಹನ್ ಇತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಊರ್ವಶಿ ಚಿತ್ರಮಂದಿರ ನೆಲಸಮ ಪ್ರಕ್ರಿಯೆ ಸದ್ಯಕ್ಕಿಲ್ಲ; ಹೈಕೋರ್ಟ್&zwnj;ನಿಂದ ತಾತ್ಕಾಲಿಕ ತಡೆಯಾಜ್ಞೆ!&lt;/strong&gt;&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-rocking-star-yash-fans-buy-tickets-for-toxic-movie-worth-rs-4-point-74-lakh-mrq/articleshow-gru0dqg"/>
        </item>
        <item>
            <title><![CDATA[ಪಾಕಿಸ್ತಾನಕ್ಕೆ ನಂಬರ್ ಹೇಗೆ ಸಿಕ್ಕಿತೋ ಗೊತ್ತಿಲ್ಲ, ಏನಾಗಿದೆ ಗೊತ್ತಿಲ್ಲ, ಶಂಕಿತ ಉಗ್ರ ಸುಹೇಲ್ ಸಹೋದರ]]></title>
            <link>https://kannada.asianetnews.com/karnataka-districts/davanagere-suhail-held-in-terror-probe-brother-denies-knowledge-of-pakistan-connection/articleshow-gv65yp3</link>
            <guid isPermaLink="true">https://kannada.asianetnews.com/karnataka-districts/davanagere-suhail-held-in-terror-probe-brother-denies-knowledge-of-pakistan-connection/articleshow-gv65yp3</guid>
            <pubDate>Thu, 25 Jun 2026 10:10:27 +0530</pubDate>
            <description><![CDATA[&lt;p&gt;ದಾವಣೆಗೆರೆಯಲ್ಲಿ ಶಂಕಿತ ಉಗ್ರ ಸುಹೇಲ್ ಬಂಧನ ಜನರಲ್ಲಿ ಆತಂಕ ಹೆಚ್ಚಿಸಿದೆ. ದಾವಣಗೆರೆಯಲ್ಲಿ ಕುಳಿತು ಪಾಕಿಸ್ತಾನ ಉಗ್ರರ ಜೊತೆ ಸಂಪರ್ಕದಲ್ಲಿದ್ದ ಆರೋಪದಡಿ ಸುಹೇಲ್ ಬಂಧನವಾಗಿದೆ. ಇದರ ಬೆನ್ನಲ್ಲೇ ಆತನ ನಂಬರ್ ಪಾಕಿಸ್ತಾನದ ಗ್ರೂಪ್&zwnj;ಗಳಲ್ಲಿ ಹೇಗೆ ಬಂತೋ ಗೊತ್ತಿಲ್ಲ ಎಂದ ಸಹೋದರ ಹೇಳಿದ್ದಾನೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvy3k3fz1zxbjw1a6mmsx9xk,imgname-----------------------2026-06-25t060937.321-1782348090879.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣೆಗೆರ (ಜೂ.25) &lt;/strong&gt;ಆಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಪಾಕಿಸ್ತಾನ ಉಗ್ರರ ಜೊತೆ ಸಂಚು ರೂಪಿಸಿ ದಾವಣೆಗೆರೆಯಲ್ಲಿ ಅರೆಸ್ಟ್ ಆಗಿರುವ ಶಂಕಿತ ಉಗ್ರ ಸೊಹೆಲ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಶಂಕಿತ ಉಗ್ರ ಸೊಹೇಲ್ ಬಂಧನ ಪ್ರಕರಣ ಕುರಿತು ಸಹೋದರ ಶೋಯೆಬ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾನೆ. ಎರಡು ತಿಂಗಳ ಹಿಂದೆ ಸುಹೇಲ್&zwnj;ಗೆ ಮೊಬೈಲ್ ಕೊಡಿಸಿದ್ದೆ. ಆದರೆ ಪಾಕಿಸ್ತಾನ ಮೂಲದ ಗ್ರೂಪ್&zwnj;ಗಳಿಗೆ ಈತನ ನಂಬರ್ ಹೇಗೆ ಆ್ಯಡ್ ಆಯ್ತು ಗೊತ್ತಿಲ್ಲ ಎಂದು ಶೋಯೆಬ್ ಹೇಳಿದ್ದಾರೆ. ನಾವು ಉತ್ತರಪ್ರದೇಶದ ಸಹರಾನ್&zwnj;ಪುರ ಜಿಲ್ಲೆಯವರು. ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲಾಗಿದೆ. ನನ್ನ ಐಡಿ ಬಳಸಿ ಆತನಿಗೆ ಸಿಮ್ ಕೊಡಿಸಲಾಗಿದೆ ಎಂದು ಶೋಯೆಬ್ ಹೇಳಿದ್ದಾನೆ.&lt;/p&gt;&lt;h2&gt;ಏನಾಯ್ತೋ ಗೊತ್ತಿಲ್ಲ, ಹೇಗಾಯ್ತೋ ಗೊತ್ತಿಲ್ಲ, ಏನಿದೆಯೋ ಗೊತ್ತಿಲ್ಲ&lt;/h2&gt;&lt;p&gt;ನಮ್ಮ ತಂದೆ ತಾಯಿಗೆ ಒಟ್ಟು ಹತ್ತು ಜನ ಮಕ್ಕಳು. ಆರು ಸಹೋದರಿಯರು ಹಾಗೂ ನಾಲ್ವರು ಸಹೋದರರು. ಸುಹೇಲ್ ಕೊನೆಯವನು, ಆತನ ವಯಸ್ಸು ಕಡಿಮೆ ಇದೆ. ಹೀಗಾಗಿ ನನ್ನ ಆಧಾರ್ ಕಾರ್ಡ್ ಬಳಸಿ ಸಿಮ್ ಕೊಡಿಸಿದ್ದೆ. ಆತನ ಆಧಾರ್ ಕಾರ್ಡ್ ಸೇರಿದಂತೆ ಎಲ್ಲರ ಆಧಾರ್ ಕಾರ್ಡ್ ವಿಳಾಸ ಅಪ್&zwnj;ಡೇಟ್ ಮಾಡಿದ್ದೇವೆ. ಈ ಹಿಂದೆ ದೆಹಲಿ, ನೋಯ್ಡಾ ಸೇರಿ ಹಲವೆಡೆ ಕೆಲಸ ಮಾಡಿದ್ದೇವೆ. ಪಾಕಿಸ್ತಾನದ ಗ್ರೂಪ್&zwnj;ಗಳಲ್ಲಿ ಯಾರು ಆತನ ಆ್ಯಡ್ ಮಾಡಿದ್ದಾರೆ ಗೊತ್ತಿಲ್ಲ. ಅದರಲ್ಲಿ ಏನು ಮಾತುಕತೆ ಆಗಿದೆ ಗೊತ್ತಿಲ್ಲ. ಪೊಲೀಸರು ಆಗಮಿಸಿ ನಮ್ಮ 8 ಜನರನ್ನು ಕರೆದುಕೊಂಡು ಹೋಗಿದ್ರು. ಬಳಿಕ ಆತನ ಮೊಬೈಲ್&zwnj;ನಲ್ಲಿ&zwnj; ಏನು ಪತ್ತೆಯಾಗಿದೆಯೋ ಗೊತ್ತಿಲ್ಲ. ತಮ್ಮನ ಅರೆಸ್ಟ್ ಮಾಡಿ ಕೋರ್ಟ್&zwnj;ಗೆ ಹಾಜರು ಪಡಿಸಿ ಜೈಲಿಗೆ ಕಳಿಸಿದರು ಎಂದು ಶೋಯೆಬ್ ಹೇಳಿದ್ದಾನೆ.&lt;/p&gt;&lt;p&gt;ನಮ್ಮ ತಂದೆ ತಾಯಿಗೆ ವಿಷಯ ತಿಳಿಸಿದ್ದೇವೆ. ಉತ್ತರ ಪ್ರದೇಶದಲ್ಲಿರುವ ಅವರು ನಾಳೆ ಅಥವಾ ನಾಡಿದ್ದು ಬರಬಹುದು ಎಂದು ಸುಹೇಲ್ ಸಹೋದರ ಶೋಯೆಬ್&zwnj; ಹೇಳಿದ್ದಾನೆ. ಇತ್ತ ಸುಹೇಲ್ ಜೊತೆ ದಾವಣೆಗೆರೆ ಕೆಲಸಕ್ಕೆ ಸೇರಿದ ಜಹೇದ್ ಅರೆಸ್ಟ್ ಕುರಿತು ಪ್ರತಕ್ರಿಯಿಸಿದ್ದಾನೆ.&lt;/p&gt;&lt;h2&gt;ನಾವು ಕಾರ್ಮಿಕರು ನಮಗೇನು ಗೊತ್ತಿಲ್ಲ&lt;/h2&gt;&lt;p&gt;ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಶಂಕಿತ ಉಗ್ರ ಸುಹೇಲ್ ಬಂಧನ ಪ್ರಕರಣ ಸಂಬಂಧ ಸುಹೇಲ್ ಜೊತೆ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ. ಈ ಪೈಕಿ ಬಹುತೇಕ ಎಲ್ಲಾ ಉದ್ಯೋಗಿಗಳು ಒಕ್ಕೊರಲಿನಿಂದ ನಮಗೇನು ಗೊತ್ತಿಲ್ಲ, ನಾವು ಕಾರ್ಮಿಕರು ಎಂದಿದ್ದಾರೆ. ನಾವು ಹತ್ತು ಹದಿನೈದು ದಿನಗಳ ಹಿಂದೆ ಕೆಲಸಕ್ಕೆ ಆಗಮಿಸಿದ್ದೇವೆ. ಅವರು ಇಬ್ಬರು ಸಹೋದರರು ಇದ್ದರು. ಇಬ್ಬರು ಈಗ ಇಲ್ಲಿಂದ ಹೋಗಿದ್ದಾರೆ . ಹೆಚ್ಚಿನ ಮಾಹಿತಿ ನಮಗೆ ಗೊತ್ತಿಲ್ಲ ಎಂದು ಸಹೋದ್ಯೋಗಿ ಜಹೇದ್ ಹೇಳಿದ್ದಾನೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>davanagere</category>
            <dc:creator>Chethan Kumar</dc:creator>
            <atom:link href="https://kannada.asianetnews.com/karnataka-districts/davanagere-suhail-held-in-terror-probe-brother-denies-knowledge-of-pakistan-connection/articleshow-gv65yp3"/>
        </item>
        <item>
            <title><![CDATA[ಪೊಲೀಸರ ಮೇಲೆ ಅನುಮಾನ.. 3 ತಿಂಗಳ ಹಿಂದೆ ಹೂತಿಟ್ಟಿದ್ದ ಅಮ್ಮನ ಶವ ತೆಗೆದು ಆಸ್ಪತ್ರೆಗೆ ಬಂದ ಅಣ್ಣ, ತಮ್ಮ!]]></title>
            <link>https://kannada.asianetnews.com/gallery/davanagere/shocking-in-davangere-brothers-exhume-mothers-body-3-months-after-burial-bring-it-to-hospital-gkn-h5q674f</link>
            <guid isPermaLink="true">https://kannada.asianetnews.com/gallery/davanagere/shocking-in-davangere-brothers-exhume-mothers-body-3-months-after-burial-bring-it-to-hospital-gkn-h5q674f</guid>
            <pubDate>Sun, 19 Jul 2026 14:12:30 +0530</pubDate>
            <description><![CDATA[&lt;p&gt;ತಾಯಿಯ ಸಾವಿಗೆ ನ್ಯಾಯ ಸಿಗುತ್ತಿಲ್ಲ ಎಂಬ ಆಕ್ರೋಶ.. ಪೊಲೀಸರು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂಬ ಸಂಶಯ.. ಕೊನೆಗೆ ನ್ಯಾಯಕ್ಕಾಗಿ ಹಂಬಲಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದಾರೆ. ಏನದು ಸ್ಟೋರಿ? ಓದಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxwnsy8vepzjs7h22c8wbayn,imgname-india-s-cultural-heritage-youtube-thumbnail-1784447564059.png" type="image/jpeg" height="390" width="690"/>
            <content:encoded><![CDATA[&lt;p&gt;ತಾಯಿಯ ಸಾವಿಗೆ ನ್ಯಾಯ ಸಿಗುತ್ತಿಲ್ಲ ಎಂಬ ಆಕ್ರೋಶ.. ಪೊಲೀಸರು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂಬ ಸಂಶಯ.. ಕೊನೆಗೆ ನ್ಯಾಯಕ್ಕಾಗಿ ಹಂಬಲಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದಾರೆ. ಏನದು ಸ್ಟೋರಿ? ಓದಿ..&lt;/p&gt;&lt;img&gt;&lt;p&gt;&lt;strong&gt;ದಾವಣಗೆರೆ: &lt;/strong&gt;ತಾಯಿಯ ಸಾವಿಗೆ ನ್ಯಾಯ ಸಿಗುತ್ತಿಲ್ಲ ಎಂಬ ಆಕ್ರೋಶ.. ಪೊಲೀಸರು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂಬ ಸಂಶಯ.. ಕೊನೆಗೆ ನ್ಯಾಯಕ್ಕಾಗಿ ಹಂಬಲಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದಾರೆ. 3 ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಿದ್ದ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದು ಬೈಕ್&zwnj;ನಲ್ಲಿ ಹೊತ್ತುಕೊಂಡು ಜಿಲ್ಲಾಸ್ಪತ್ರೆಗೆ ಬಂದಿರುವ ಘೋರ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಆದಾಪುರ ಗ್ರಾಮದ ಈರಮ್ಮ ಎಂಬುವವರು ಏಪ್ರಿಲ್ 29ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ತಾಯಿಯ ಸಾವಿಗೆ ಅಕ್ಕಪಕ್ಕದ ಮನೆಯವರೇ ಕಾರಣ ಎಂದು ಮಗ ಮಂಜುನಾಥ್ ಆರೋಪಿಸಿದ್ದರು. ಈ ಸಂಬಂಧ 11 ಜನರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಲೆಬೆನ್ನೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು.&lt;/p&gt;&lt;img&gt;&lt;p&gt;ತಾಯಿಯ ಕೊಲೆ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂಬುದು ಮಕ್ಕಳಾದ ಮಂಜುನಾಥ್ ಮತ್ತು ವೆಂಕಟೇಶ್ ಅವರ ಗಂಭೀರ ಆರೋಪ. ನಮ್ಮ ತಾಯಿಯನ್ನು ಕೊಲೆ ಮಾಡಲಾಗಿದೆ, ಆದರೆ ಸರಿಯಾದ ತನಿಖೆ ನಡೆಯುತ್ತಿಲ್ಲ. ನಮಗೆ ಮೊದಲ ಮರಣೋತ್ತರ ಪರೀಕ್ಷೆಯ ಮೇಲೆ ನಂಬಿಕೆಯಿಲ್ಲ ಎಂದು ಪಟ್ಟು ಹಿಡಿದಿದ್ದರು. ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗದಿದ್ದಾಗ ಮಕ್ಕಳೇ ಸಾಹಸಕ್ಕೆ ಕೈಹಾಕಿದ್ದಾರೆ.&lt;/p&gt;&lt;img&gt;&lt;p&gt;ನಿನ್ನೆ ಮಧ್ಯರಾತ್ರಿ ಹರಿಹರ ತಾಲೂಕಿನ ಆದಾಪುರ ಗ್ರಾಮದ ಸ್ಮಶಾನಕ್ಕೆ ಹೋದ ಅಣ್ಣ-ತಮ್ಮ, ತಾಯಿಯ ಸಮಾಧಿಯನ್ನು ಅಗೆದಿದ್ದಾರೆ. ಹೂತಿಟ್ಟಿದ್ದ ಶವವನ್ನು ಹೊರತೆಗೆದು ಬೆಡ್&zwnj;ಶೀಟ್&zwnj;ನಲ್ಲಿ ಸವಾರಿ ಮಾಡಿಕೊಂಡು ಬೈಕ್ ಮೇಲೆ ಕುರಿಸಿಕೊಂಡು ದಾವಣಗೆರೆ ಜಿಲ್ಲಾಸ್ಪತ್ರೆಗೆ ಹೊರಟಿದ್ದಾರೆ. 3 ತಿಂಗಳ ಹಿಂದಿನ ಶವವನ್ನು ಬೈಕ್&zwnj;ನಲ್ಲಿ ಹೊತ್ತು ಸಾಗುತ್ತಿದ್ದ ದೃಶ್ಯ ಮೈ ಜುಂ ಎನ್ನುವಂತಿತ್ತು.&lt;/p&gt;&lt;img&gt;&lt;p&gt;ಶವವನ್ನು ಹೊತ್ತು ದಾವಣಗೆರೆ ಹೊರವಲಯದಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಬೈಕ್ ಅಪಘಾತಕ್ಕೀಡಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬೆಡ್&zwnj;ಶೀಟ್&zwnj;ನಲ್ಲಿ ಸುತ್ತಿಟ್ಟಿದ್ದ ಶವವನ್ನು ಕಂಡು ಗಾಬರಿಯಾಗಿದ್ದಾರೆ. ಕೂಡಲೇ ಶವವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ತಾಯಿಯ ಮೃತದೇಹ ದಾವಣಗೆರೆ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು, ನಮ್ಮ ತಾಯಿಗೆ ನ್ಯಾಯ ಸಿಗಬೇಕು, ಹಿರಿಯ ವೈದ್ಯರಿಂದ ಮರು ಮರಣೋತ್ತರ ಪರೀಕ್ಷೆ ನಡೆಯಬೇಕು ಎಂದು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/gallery/davanagere/shocking-in-davangere-brothers-exhume-mothers-body-3-months-after-burial-bring-it-to-hospital-gkn-h5q674f"/>
        </item>
        <item>
            <title><![CDATA[ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ: ದಾವಣಗೆರೆಯ Zudio ಮಳಿಗೆಗೆ ₹ 30,000 ದಂಡ]]></title>
            <link>https://kannada.asianetnews.com/business/district-consumer-commission-extra-charge-for-carry-bag-davanagere-s-zudio-store-fined-rs-30000-mrq/articleshow-kt50rh0</link>
            <guid isPermaLink="true">https://kannada.asianetnews.com/business/district-consumer-commission-extra-charge-for-carry-bag-davanagere-s-zudio-store-fined-rs-30000-mrq/articleshow-kt50rh0</guid>
            <pubDate>Thu, 13 Aug 2026 07:22:14 +0530</pubDate>
            <description><![CDATA[ದಾವಣಗೆರೆಯಲ್ಲಿ, ಗ್ರಾಹಕರಿಂದ ಕ್ಯಾರಿ ಬ್ಯಾಗ್&zwnj;ಗೆ ಹೆಚ್ಚುವರಿಯಾಗಿ ₹10 ಶುಲ್ಕ ವಿಧಿಸಿದ್ದಕ್ಕಾಗಿ ಜುಡಿಯೊ ಮಳಿಗೆಗೆ ಜಿಲ್ಲಾ ಗ್ರಾಹಕರ ಆಯೋಗ ₹30,000 ದಂಡ ವಿಧಿಸಿದೆ. ಕ್ಯಾರಿ ಬ್ಯಾಗ್&zwnj;ಗೆ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಮತ್ತು ಸೇವಾ ನ್ಯೂನತೆ ಎಂದು ಆಯೋಗ ತೀರ್ಪು ನೀಡಿದ್ದು, ಈ ಆದೇಶ ಎಲ್ಲಾ ಮಳಿಗೆಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kgc3d4218vgg858de1meqkrm,imgname-zudio--3--1769932755009.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ:&lt;/strong&gt; ಗ್ರಾಹಕರಿಂದ ಕ್ಯಾರಿ ಬ್ಯಾಗ್&zwnj;ಗೆ ಹೆಚ್ಚುವರಿಯಾಗಿ ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ತೀರ್ಪು ನೀಡಿದೆ.&lt;/p&gt;&lt;p&gt;ಪಿ.ಜೆ. ಬಡಾವಣೆಯ ಎವಿಕೆ ರಸ್ತೆಯ ಜುಡಿಯೊ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ದೂರುದಾರ ರಾಜೇಂದ್ರ ಎಂಬವರಿಂದ ಕ್ಯಾರಿ ಬ್ಯಾಗ್&zwnj;ಗಾಗಿ ಹೆಚ್ಚುವರಿಯಾಗಿ ₹10 ವಸೂಲಿ ಮಾಡಿದ್ದಕ್ಕಾಗಿ ಆಯೋಗವು ಈ ಆದೇಶ ಹೊರಡಿಸಿದೆ.&lt;/p&gt;&lt;h2&gt;&lt;strong&gt;ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು&lt;/strong&gt;&lt;/h2&gt;&lt;p&gt;ಜುಡಿಯೊ ಮಳಿಗೆಯಲ್ಲಿ ಬಟ್ಟೆಗಳನ್ನು ಖರೀದಿಸಿದ ರಾಜೇಂದ್ರ ಅವರಿಂದ ಕ್ಯಾರಿ ಬ್ಯಾಗ್&zwnj;ಗೆ ಹೆಚ್ಚುವರಿಯಾಗಿ ₹10 ಶುಲ್ಕ ಪಡೆಯಲಾಗಿತ್ತು. ಇದರ ವಿರುದ್ಧ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರು ಪರಿಶೀಲಿಸಿದ ಆಯೋಗವು, ಗ್ರಾಹಕರಿಂದ ಕ್ಯಾರಿ ಬ್ಯಾಗ್ ಶುಲ್ಕ ವಸೂಲಿ ಮಾಡುವುದು ಕಾನೂನುಬಾಹಿರ ಹಾಗೂ ಸೇವಾ ಲೋಪ ಎಂದು ಸ್ಪಷ್ಟಪಡಿಸಿದೆ.&lt;/p&gt;&lt;p&gt;ಸೇವೆಯಲ್ಲಾದ ನಿರ್ಲಕ್ಷ್ಯ, ಅನ್ಯಾಯದ ವ್ಯಾಪಾರ ಮತ್ತು ದೂರಿನ ಖರ್ಚು ಸೇರಿ ದೂರುದಾರರಿಗೆ ಒಟ್ಟು ₹10,000 ಪರಿಹಾರ ಹಾಗೂ ಪಾವತಿಸಿದ್ದ ₹10 ಹಿಂತಿರುಗಿಸುವಂತೆ ಜುಡಿಯೊ ಸಂಸ್ಥೆಗೆ ಆಯೋಗ ಆದೇಶಿಸಿದೆ. ಇದರೊಂದಿಗೆ ಗ್ರಾಹಕ ಕಾನೂನು ನೆರವು ಖಾತೆಗೆ ₹20,000 ಜಮಾ ಮಾಡಲು ಸಹ ಸೂಚಿಸಿದೆ. ಒಟ್ಟು ₹30,000 ಮೊತ್ತವನ್ನು ಆದೇಶದ ದಿನಾಂಕದಿಂದ ಒಂದು ತಿಂಗಳೊಳಗೆ ಪಾವತಿಸಲು ಆದೇಶಿಸಲಾಗಿದೆ.&lt;/p&gt;&lt;h3&gt;&lt;strong&gt;ಎಲ್ಲಾ ಮಳಿಗೆಗಳಿಗೂ ಆದೇಶ ಅನ್ವಯ:&lt;/strong&gt;&lt;/h3&gt;&lt;p&gt;ಉತ್ಪನ್ನಗಳನ್ನು ಖರೀದಿಸುವ ಎಲ್ಲಾ ಗ್ರಾಹಕರಿಗೆ ಉಚಿತವಾಗಿ ಕ್ಯಾರಿ ಬ್ಯಾಗ್&zwnj;ಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಈ ಆದೇಶವು ಕೇವಲ ಸದರಿ ಮಳಿಗೆಗೆ ಮಾತ್ರವಲ್ಲದೆ ಎಲ್ಲಾ ಸಗಟು ವ್ಯಾಪಾರಿಗಳು, ರಿಟೇಲ್ ಮಾರಾಟಗಾರರು, ದೊಡ್ಡ ಮಾಲ್&zwnj;ಗಳು, ಮೋರ್, ರಿಲಯನ್ಸ್, ಟ್ರೆಂಡ್ಸ್ ಹಾಗೂ ಇನ್ನಿತರ ಎಲ್ಲಾ ಮಾರಾಟ ಮಳಿಗೆಗಳಿಗೂ ಅನ್ವಯಿಸುತ್ತದೆ ಎಂದು ಆಯೋಗ ತಿಳಿಸಿದೆ.&lt;/p&gt;&lt;p&gt;ಈ ಆದೇಶವನ್ನು ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷೆ ಎಚ್.ಎನ್. ಮೀನಾ, ಸದಸ್ಯ ಸಿ.ಎಸ್. ತ್ಯಾಗರಾಜನ್ ಅವರನ್ನು ಒಳಗೊಂಡ ಪೀಠವು ಹೊರಡಿಸಿದೆ ಎಂದು ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಅಚ್ಚರಿಯ ಬೆಳವಣಿಗೆ: ZUDIO ಶಾಪಿಂಗ್&zwnj;ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು! ಕಾರಣ ಏನು?&lt;/strong&gt;&lt;/p&gt;]]></content:encoded>
            <category>davanagere</category>
            <dc:creator>Mahmad Rafik</dc:creator>
            <atom:link href="https://kannada.asianetnews.com/business/district-consumer-commission-extra-charge-for-carry-bag-davanagere-s-zudio-store-fined-rs-30000-mrq/articleshow-kt50rh0"/>
        </item>
        <item>
            <title><![CDATA[ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ ಆರೋಪ -ದಾವಣಗೆರೆಯಲ್ಲಿ ಇವತ್ತು ಏನಾಯ್ತು?]]></title>
            <link>https://kannada.asianetnews.com/davanagere/dalit-youths-assaulted-in-davangere-after-entering-temple-gkn/articleshow-letfihp</link>
            <guid isPermaLink="true">https://kannada.asianetnews.com/davanagere/dalit-youths-assaulted-in-davangere-after-entering-temple-gkn/articleshow-letfihp</guid>
            <pubDate>Sat, 01 Aug 2026 20:33:52 +0530</pubDate>
            <description><![CDATA[ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ 'ಅಜ್ಜಿ ಹಬ್ಬ'ದ ವೇಳೆ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲೆ ಹಲ್ಲೆ ನಡೆದಿದೆ. ಘಟನೆಯ ನಂತರ ಜಿಲ್ಲಾಡಳಿತ ಮಧ್ಯಪ್ರವೇಶಿಸಿ, ದಲಿತರಿಗೆ ದೇವಸ್ಥಾನ ಪ್ರವೇಶ ಕಲ್ಪಿಸಿದ್ದು, 42 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kyyxjajn4adxv5nj5ha8mnkd,imgname-davanagere-dalita-temple-1785596553811.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದೇವಸ್ಥಾನ ಪ್ರವೇಶದ ಹಿನ್ನೆಲೆಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಖಡಕ್ ಕ್ರಮಕ್ಕೆ ಮುಂದಾಗಿದೆ. 40ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.&lt;/p&gt;&lt;p&gt;ಹೌದು ದಾವಣಗೆರೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಲಗೆರೆ ಗ್ರಾಮದಲ್ಲಿ ನಿನ್ನೆ ರಾತ್ರಿ ಈ ಅಹಿತಕರ ಘಟನೆ ನಡೆದಿದೆ. ಗ್ರಾಮದಲ್ಲಿ 'ಅಜ್ಜಿ ಹಬ್ಬ'ದ ಸಂಭ್ರಮ ಮನೆ ಮಾಡಿತ್ತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ತೆರಳಿದ್ದ ದಲಿತ ಯುವಕರ ಮೇಲೆ ಗ್ರಾಮದ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಮುಂಭಾಗ ನಡೆದ ಈ ಗಲಾಟೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಜಿಲ್ಲಾಡಳಿತದ ನಡೆ&lt;/strong&gt;&lt;/h2&gt;&lt;p&gt;ಘಟನೆ ತಿಳಿಯುತ್ತಿದ್ದಂತೆಯೇ ಅಲರ್ಟ್ ಆದ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಎಸ್&zwnj;ಪಿ ಶೇಖರ್ ಹೆಚ್.ಟಿ ಅವರು ಇಂದು ಖುದ್ದಾಗಿ ಬೆಳಲಗೆರೆ ಗ್ರಾಮಕ್ಕೆ ಭೇಟಿ ನೀಡಿದರು. ಪರಿಸ್ಥಿತಿಯನ್ನು ಪರಿಶೀಲಿಸಿದ ಅಧಿಕಾರಿಗಳು, ಎರಡೂ ಸಮುದಾಯದ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸಿದರು.&lt;/p&gt;&lt;h2&gt;&lt;strong&gt;ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದ ದಲಿತರು&lt;/strong&gt;&lt;/h2&gt;&lt;p&gt;ಜಿಲ್ಲಾಧಿಕಾರಿಗಳ ಸಮ್ಮುಖದಲ್ಲೇ ದಲಿತ ಸಮುದಾಯದ ಮಹಿಳೆಯರು ಮತ್ತು ಯುವಕರಿಗೆ ದೇವಸ್ಥಾನದ ಒಳಗೆ ಹೋಗಲು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿತು. ಎಲ್ಲರೂ ಒಟ್ಟಾಗಿ ದೇವಸ್ಥಾನಕ್ಕೆ ಪ್ರವೇಶಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ಗ್ರಾಮದಲ್ಲಿನ ಅಸಮಾನತೆಯ ಗೋಡೆಯನ್ನು ಒಡೆಯುವ ಪ್ರಯತ್ನ ಮಾಡಲಾಯಿತು.&lt;/p&gt;&lt;h2&gt;&lt;strong&gt;42 ಜನರ ವಿರುದ್ಧ FIR&lt;/strong&gt;&lt;/h2&gt;&lt;p&gt;ಇನ್ನು ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಸವಾಪಟ್ಟಣ ಪೊಲೀಸರು, ಒಟ್ಟು 42 ಜನರ ವಿರುದ್ಧ ಎಫ್&zwnj;ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಮುಂದೆ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಗ್ರಾಮದ ಮುಖಂಡರಿಗೆ ಜಿಲ್ಲಾಧಿಕಾರಿಗಳು ಮತ್ತು ಎಸ್&zwnj;ಪಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದ್ಯ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆ ನಿಯೋಜಿಸಲಾಗಿದೆ. ಅಧಿಕಾರಿಗಳು ಗ್ರಾಮಸ್ಥರಿಗೆ ಸೌಹಾರ್ದತೆಯಿಂದ ಬಾಳುವಂತೆ ಕಿವಿಮಾತು ಹೇಳಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/davanagere/dalit-youths-assaulted-in-davangere-after-entering-temple-gkn/articleshow-letfihp"/>
        </item>
        <item>
            <title><![CDATA[ಬೆಲೆ ಕುಸಿತ: ಟೊಮ್ಯಾಟೋ 1 ರೂ, ಕೊತ್ತಂಬರಿ 3 ರೂ, ಲೋಡ್‌ ತಂದು ರಸ್ತೆಗೆ ಎಸೆದ ರೈತ!]]></title>
            <link>https://kannada.asianetnews.com/karnataka-districts/karnataka-tomato-and-coriander-price-crash-farmers-dump-crops-amid-severe-losses-gdp/articleshow-n15b15y</link>
            <guid isPermaLink="true">https://kannada.asianetnews.com/karnataka-districts/karnataka-tomato-and-coriander-price-crash-farmers-dump-crops-amid-severe-losses-gdp/articleshow-n15b15y</guid>
            <pubDate>Mon, 24 Aug 2026 07:15:51 +0530</pubDate>
            <description><![CDATA[ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿದಿದ್ದರಿಂದ ಬೆಳಗಾವಿಯಲ್ಲಿ ರೈತರು ಬೆಳೆಯನ್ನು ರಸ್ತೆಗೆ ಎಸೆದರೆ, ದಾವಣಗೆರೆಯಲ್ಲಿ ಟೊಮ್ಯಾಟೋಗೆ ಕೆಜಿಗೆ ಕೇವಲ 1 ರೂ. ಸಿಕ್ಕಿದ್ದರಿಂದ ಕಟಾವು ಮಾಡದೆ ಗಿಡದಲ್ಲೇ ಬಿಟ್ಟಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01m0rphwne24j3veesfw9h2c98,imgname-kottabmari-1787535356589.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿ/ ದಾವಣಗೆರೆ: ಹಾಕಿದ ಬಂಡವಾಳವೂ ಬಾರದೆ ರೈತರು ತಾವು ಬೆಳೆದ ಕೊತ್ತಂಬರಿ ಸೊಪ್ಪು ಮತ್ತು ಟೊಮ್ಯಾಟೋ ಬೆಳೆಯನ್ನು ರಸ್ತೆ ಬಿಸಾಡಿದ ಘಟನೆಯು ಭಾನುವಾರ ನಡೆದಿದೆ.&lt;/p&gt;&lt;p&gt;ಬೆಳಗಾವಿಯ ರಾಯಭಾಗದಲ್ಲಿ 2 ದಿನಗಳ ಹಿಂದೆ ಕಟ್ಟಿಗೆ 10ರಿಂದ 15 ರು.ವರೆಗೆ ಮಾರಾಟವಾಗುತ್ತಿದ್ದ ಕೊತ್ತಂಬರಿ ಸೊಪ್ಪಿಗೆ ಶನಿವಾರ ಸಂಜೆ 10 ರು.ಗೆ ಮೂರು ಕಟ್ಟುಗಳು ಮಾರಾಟವಾಗುತ್ತಿದ್ದವು. ಆದರೆ ಭಾನುವಾರ 3ರಿಂದ 5 ರು.ಗೆ ಕುಸಿತವಾಗಿದೆ. ಪರಿಣಾಮ ಖರ್ಚು ಮಾಡಿದ್ದ ಮೊತ್ತವೂ ಬಾರದ ಹಿನ್ನೆಲೆ ಅಸಮಾಧಾನದಿಂದ ರೈತರು, ಸೊಪ್ಪನ್ನು ರಸ್ತೆ ಬಿಸಾಡಿದ್ದಾರೆ.&lt;/p&gt;&lt;h2&gt;ಟೊಮ್ಯಾಟೋ ಕೇಜಿಗೆ ₹1:&lt;/h2&gt;&lt;p&gt;ಮತ್ತೊಂದೆಡೆ ದಾವಣಗೆರೆಯಲ್ಲಿ ಟೊಮ್ಯಾಟೋ ಬೆಲೆ ದಿಢೀರ್&zwnj; ಕುಸಿತವು ತುಂಬಲಾರದ ನಷ್ಟವಾಗಿ ಪರಿಣಮಿಸಿದೆ. ಕೇಜಿಗೆ ಕೇವಲ 1 ರು.ಗೆ ಕುಸಿತದಿಂದಾಗಿ 80 ಸಾವಿರ ರು.ನಿಂದ 1 ಲಕ್ಷ ರು.ವರೆಗೆ ಬಂಡವಾಳ ಹೂಡಿದ್ದ ಕಿಂಚಿತ್ತೂ ಮೊತ್ತ ದೊರೆಯದ ಕಾರಣ ಕಟಾವು ಮಾಡದೆ ಗಿಡಗಳಲ್ಲಿಯೇ ಹಾಗೆಯೇ ಬಿಟ್ಟಿದ್ದಾರೆ. ಇದರಿಂದಾಗಿ ಕೈಗೆ ಬಂದಿದ್ದ ಟೊಮ್ಯಾಟೋ ಫಸಲು ಮಣ್ಣುಪಾಲಾಗುತ್ತಿದೆ. ದಾವಣಗೆರೆ, ಚನ್ನಗಿರಿ, ಹೊನ್ನಾಳಿ ತಾಲೂಕುಗಳಲ್ಲಿ ರೈತರಿಗೆ ದಿಕ್ಕು ತೋಚದಂತಾಗಿದೆ.&lt;/p&gt;]]></content:encoded>
            <category>davanagere</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/karnataka-tomato-and-coriander-price-crash-farmers-dump-crops-amid-severe-losses-gdp/articleshow-n15b15y"/>
        </item>
        <item>
            <title><![CDATA['ನನ್ನ ಕಣ್ಣು ಕುರುಡು ಅಂದ್ಕೊಂಡ್ರಾ?..' ನಾಡಗೀತೆ ಹಾಡುತ್ತಿದ್ದರೂ ಎದ್ದು ನಿಲ್ಲದ ಅಧಿಕಾರಿಗಳಿಗೆ ಸಿಎಂ ಕ್ಲಾಸ್!]]></title>
            <link>https://kannada.asianetnews.com/karnataka-districts/cm-dk-shivakumar-warns-jagalur-officials-over-irresponsibility-during-nadageete-singing-rav/articleshow-s5awem3</link>
            <guid isPermaLink="true">https://kannada.asianetnews.com/karnataka-districts/cm-dk-shivakumar-warns-jagalur-officials-over-irresponsibility-during-nadageete-singing-rav/articleshow-s5awem3</guid>
            <pubDate>Wed, 12 Aug 2026 09:54:54 +0530</pubDate>
            <description><![CDATA[ವಿಧಾನಸೌಧದಿಂದ ನಡೆಸಿದ ವಿಡಿಯೋ ಸಂವಾದದಲ್ಲಿ, ನಾಡಗೀತೆ ಹಾಡುವಾಗ ಎದ್ದು ನಿಲ್ಲದ ಜಗಳೂರು ತಾಲೂಕಿನ ಅಧಿಕಾರಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಮನಿಸಿದರು. 'ನನ್ನ ಕಣ್ಣು ಕುರುಡಲ್ಲ' ಎಂದು ಹೇಳುವ ಮೂಲಕ, ನಾಡಗೀತೆಗೆ ಅಗೌರವ ತೋರಿದ ಅಧಿಕಾರಿಗಳಿಗೆ ಅವರು ತರಾಟೆಗೆ ತೆಗೆದುಕೊಂಡರು.]]></description>
            <media:content url="https://static.asianetnews.com/images/w-1280,h-720,format-jpg,imgid-01kzt2kcjskg7psgdrxfp3f4ks,imgname-----------------------2026-08-12t093942.427-1786507801177.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ದಾವಣಗೆರೆ (ಆ.12): &lt;/strong&gt;ನಾಡಗೀತೆಗೆ ಹಾಡುವಾಗ ಕುಳಿತುಕೊಂಡಿದ್ದ ಜಗಳೂರು ತಾಲೂಕು ಅಧಿಕಾರಿಗಳು, ನೌಕರರಿಗೆ ವಿಧಾನಸಾಧದ ಬ್ಯಾಂಕ್ವೆಟ್ ಹಾಲ್&zwnj;ನಿಂದಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್&zwnj; ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.&lt;/p&gt;&lt;h2&gt;ನಾಡಗೀತೆ ಹಾಡುತ್ತಿದ್ದರೂ ಎದ್ದು ನಿಲ್ಲದ ಅಧಿಕಾರಿಗಳು!&lt;/h2&gt;&lt;p&gt;ಮಂಗಳವಾರ ಸಿಎಂ ಡಿ.ಕೆ.ಶಿವಕುಮಾರ್&zwnj; ವಿಧಾನಸೌಧದಿಂದ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರ ವೀಡಿಯೋ ಸಂವಾದ ಹಮ್ಮಿಕೊಂಡಿದ್ದರು. ಸಂವಾದ ಆರಂಭಕ್ಕೂ ಮುನ್ನ ನಾಡಗೀತೆಯನ್ನು ಹಾಡಲಾಯಿತು. ಈ ವೇಳೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಧಿಕಾರಿಗಳು ನಾಡಗೀತೆ ಹಾಡುತ್ತಿದ್ದರೂ ಎದ್ದು ನಿಂತಿರಲಿಲ್ಲ.&lt;/p&gt;&lt;h3&gt;ನನ್ನ ಕಣ್ಣು ಕುರುಡು ಅಂದ್ಕೊಂಡಿದ್ದೀರಾ? ಸಿಎಂ ಗರಂ&lt;/h3&gt;&lt;p&gt;ಉಪ ವಿಭಾಗಾಧಿಕಾರಿ ಸಂತೋಷ್, ಜಗಳೂರು ತಹಸೀಲ್ದಾರ್ ಗುರುಬಸಪ್ಪ, ತಾಪಂ ಇಒ ಕೆಂಚಪ್ಪ ಸೇರಿದಂತೆ ಹಲವಾರು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಸಿಎಂ, ಬಳಿಕ &lsquo;ನನ್ನ ಕಣ್ಣು ಕುರುಡು ಅಂತಾ ಕೆಲವು ಜನ ತಿಳಿದುಕೊಂಡಿರಬಹುದು. ಜಗಳೂರಿನವರಿಗೆ ಪಾಪ ನಿಂತುಕೊಂಡು ನಾಡಗೀತೆಗೆ ಗೌರವ ಸಲ್ಲಿಸಲಾಗುತ್ತಿಲ್ಲ. ನಾಡಗೀತೆ ನಡೆಯಬೇಕಾದರೆ ಇನ್ನೂ ಕುಳಿತುಕೊಂಡೇ ಇದ್ದರು. ನಾನು ನನ್ನ ಮೇಲೆಯೇ ವಾಚ್ ಇಟ್ಟುಕೊಂಡಿದ್ದೇನೆ. ನನಗೆ ಇಲ್ಲಿಂದ ಜಗಳೂರು ಕಾಣುವುದಿಲ್ಲ ಅಂತಾ ಅಂದುಕೊಳ್ಳಬೇಡಿ&rsquo; ಎಂದು ಅವರು ಸೂಚ್ಯವಾಗಿ ಎಚ್ಚರಿಸಿದರು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/cm-dk-shivakumar-warns-jagalur-officials-over-irresponsibility-during-nadageete-singing-rav/articleshow-s5awem3"/>
        </item>
        <item>
            <title><![CDATA[ದಾವಣಗೆರೆ ಟು ಶಿವಮೊಗ್ಗ:  ಝೀರೋ ಟ್ರಾಫಿಕಲ್ಲಿ ಸಾಗಿಸಿದರೂ ಬದುಕದ 3 ತಿಂಗಳ ಹಸೂಗೂಸು!]]></title>
            <link>https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w</link>
            <guid isPermaLink="true">https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w</guid>
            <pubDate>Fri, 31 Jul 2026 06:16:13 +0530</pubDate>
            <description><![CDATA[ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ 3 ತಿಂಗಳ ಕೂಸನ್ನು ದಾವಣಗೆರೆಯಿಂದ ಮಣಿಪಾಲಕ್ಕೆ ಝೀರೋ ಟ್ರಾಫಿಕ್&zwnj;ನಲ್ಲಿ ಸಾಗಿಸುವಾಗ ಆ್ಯಂಬುಲೆನ್ಸ್ ಟೈರ್ ಪಂಕ್ಚರ್ ಆಗಿದೆ. ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kytspzgd2zedkb31qk1sj606,imgname-----------------------2026-07-31t060128.830-1785458294285.jpg" type="image/jpeg" height="390" width="690"/>
            <content:encoded><![CDATA[&lt;p&gt;ದಾವಣಗೆರೆ (ಜು.31): ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ 3 ತಿಂಗಳ ಕೂಸನ್ನು ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್&zwnj;ನಲ್ಲಿ ಝೀರೋ ಟ್ರಾಫಿಕ್&zwnj;ನಲ್ಲಿ ಸಾಗಿಸುವ ಪ್ರಯತ್ನ ಅರ್ಧದಲ್ಲಿಯೇ ವ್ಯರ್ಥವಾಗಿದೆ. ದಾವಣಗೆರೆ ಬಾಪೂಜಿ ಮಕ್ಕಳ ಆಸ್ಪತ್ರೆಯಿಂದ ಉಡುಪಿಯ ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಗೆ ಗುರುವಾರ ರಾತ್ರಿ ಕಳುಹಿಸಿ ಕೊಡಲಾಯಿತಾದರೂ ಮಗು ಬದುಕುಳಿಯಲಿಲ್ಲ.&lt;/p&gt;&lt;h2&gt;ಆ್ಯಂಬುಲೆನ್ಸ್&zwnj; ಟೈರ್&zwnj; ಪಂಕ್ಚರ್&lt;/h2&gt;&lt;p&gt;ದಾವಣಗೆರೆ ಜಿಲ್ಲೆ ಹರಿಹರದ ಮೂಲದ ಪಲ್ಲವಿ ಅವರನ್ನು ಕೊಪ್ಪಳದ ಹನುಮೇಶ್ವ&zwnj;ರ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಯ 3 ತಿಂಗಳು 26 ದಿನದ ಅನ್ವಿಕಾಳಿಗೆ ವಿಪರೀತ ಜ್ವರ ಬಂದ ಹಿನ್ನೆಲೆಯಲ್ಲಿ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ಪತ್ತೆ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದರು. ಅದಕ್ಕಾಗಿ ಮಗುವನ್ನು ಆ್ಯಂಬುಲೆನ್ಸ್&zwnj;ನಲ್ಲಿ ಝೀರೋ ಟ್ರಾಫಿಕ್&zwnj;ನಲ್ಲಿ ಕಳುಹಿಸಲು ನಿರ್ಧರಿಸಿ ದಾವಣಗೆರೆ, ಶಿವಮೊಗ್ಗ, ಉಡುಪಿ ಪೊಲೀಸರು ಟೊಂಕ ಕಟ್ಟಿ ವ್ಯವಸ್ಥೆ ಕೈಗೊಂಡಿದ್ದರು. ಅದರಂತೆ ವೈದ್ಯರ ತಂಡದೊಂದಿಗೆ ಹೋಗುವಾಗ ದಾವಣಗೆರೆಯ ಹೊನ್ನಾಳಿ ತಾಲೂಕಿನ ಚಿ.ಕಡದಕಟ್ಟೆ ಬಳಿ ಆ್ಯಂಬುಲೆನ್ಸ್&zwnj; ಟೈರ್&zwnj; ಪಂಕ್ಚರ್ ಆಯಿತು. ತಕ್ಷಣವೇ ಜೊತೆಯಲ್ಲಿದ್ದ ಪೊಲೀಸರು ಟಯರ್&zwnj; ಬದಲಿಸಿದರು. ಈ ವೇಳೆ ಮಗುವಿನ ಪಲ್ಸ್ ರೇಟ್ ಕಡಿಮೆ ಆಗುತ್ತಿತ್ತು. ಇದನ್ನು ಗಮನಿಸಿದ ವೈದ್ಯರ ತಂಡ ಅತಿ ತುರ್ತು ಚಿಕ್ಸಿತ್ಸೆಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಯಿತು.&lt;/p&gt;&lt;h3&gt;ವಿಶೇಷ ಆ್ಯಂಬುಲೆನ್ಸ್&zwnj;ನಲ್ಲೇ ಪುನಃ ಮಗುವಿನ ಶವ ಹರಿಹರಕ್ಕೆ&lt;/h3&gt;&lt;p&gt;ಆದರೆ ಸರ್ಜಿ ಆಸ್ಪತ್ರೆಯಲ್ಲಿ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತಾದರೂ ಮಗು ಬದುಕಲೇ ಇಲ್ಲ. ಮಗು ಕಳೆದುಕೊಂಡ ಹೆತ್ತೊಡಲು ಆಕ್ರಂದನ ಮುಗಿಲು ಮುಟ್ಟಿತ್ತು. ಮಗುವ ಪ್ರಾಣ ರಕ್ಷಣೆ ಮಾಡಲು ಹೊರಟಿದ್ದ ವಿಶೇಷ ಆ್ಯಂಬುಲೆನ್ಸ್&zwnj;ನಲ್ಲೇ ಪುನಃ ಮಗುವಿನ ಶವವನ್ನು ಹರಿಹರಕ್ಕೆ ಸಾಗಿಸಲಾಯಿತು.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-to-shivamogga-3-monthold-infant-could-not-be-saved-despite-transported-zerotraffic-conditions-rav/articleshow-vaaph9w"/>
        </item>
        <item>
            <title><![CDATA[Davanagere shocking: ಬೊಲೆರೋದಲ್ಲಿ ಬಂದು ದೇವರಿಗೆ ಬಿಟ್ಟಿದ್ದ ಗೂಳಿ ಕದ್ದೊಯ್ದ ಖದೀಮರು!]]></title>
            <link>https://kannada.asianetnews.com/karnataka-districts/davanagere-bull-theft-miscreants-in-bolero-steal-sacred-bull-dedicated-to-deity-rav/articleshow-yi1hncz</link>
            <guid isPermaLink="true">https://kannada.asianetnews.com/karnataka-districts/davanagere-bull-theft-miscreants-in-bolero-steal-sacred-bull-dedicated-to-deity-rav/articleshow-yi1hncz</guid>
            <pubDate>Thu, 02 Jul 2026 07:53:14 +0530</pubDate>
            <description><![CDATA[&lt;p&gt;ಚನ್ನಗಿರಿ ತಾಲೂಕಿನ ಸಂಗಾಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ್ದ 'ಕರಿಬಸವ' ಎಂಬ ಪವಿತ್ರ ಗೂಳಿಯನ್ನು ದುಷ್ಕರ್ಮಿಗಳು ಬೊಲೆರೋ ವಾಹನದಲ್ಲಿ ಕದ್ದೊಯ್ದಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಗೂಳಿ ರಕ್ಷಿಸುವಂತೆ ಆಗ್ರಹಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwg9fzvccd50gfbrfrztbrz9,imgname----------------------87--1782958260076.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ (ಜು.2): &lt;/strong&gt;ಊರ ಜನರಿಗೆ ನಡೆದಾಡುವ ನಂದಿಯೇ ಆಗಿದ್ದ ದೇವರಿಗೆ ಬಿಟ್ಟಿದ್ದ ಗೂಳಿಯನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ದೇವಸ್ಥಾನಕ್ಕೆ ನುಗ್ಗಿ, ಹೋರಿಯ ಕೊರಳಿಗೆ ಹಗ್ಗ ಕಟ್ಟಿ, ಬೊಲೆರೋ ವಾಹನದಲ್ಲಿ ಕದ್ದೊಯ್ದ ಘಟನೆ ಚನ್ನಗಿರಿ ತಾಲೂಕಿನ ಸಂಗಾಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.&lt;/p&gt;&lt;h2&gt;ಬೊಲೆರೋ ವಾಹನದಲ್ಲಿ ಗೂಳಿ ಹತ್ತಿಸಿದ ಖದೀಮರು!&lt;/h2&gt;&lt;p&gt;ಚನ್ನಗಿರಿ ತಾ. ಸಂಗಾಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಬಿಟ್ಟಿದ್ದ ಕರಿಬಸವ ಹೆಸರಿನ ಗೂಳಿಯನ್ನು ಬಿಳಿಬಣ್ಣದ ಸರಕು ಸಾಗಣೆಯ ಬೊಲೆರೋ ವಾಹನದಲ್ಲಿ ಬಂದ ಮೂವರು ಮುಸುಕುಧಾರಿ ದುಷ್ಕರ್ಮಿಗಳ ಪೈಕಿ ಇಬ್ಬರು ದೇವಸ್ಥಾನಕ್ಕೆ ನುಗ್ಗಿ, ನಂದಿಯ ಕೊರಳಿಗೆ ಹಗ್ಗ ಕಟ್ಟಿ, ತಾಡಪಾಲು ಮುಚ್ಚಿದ್ದ ಬೊಲೆರೋ ವಾಹನದಲ್ಲಿ ಹತ್ತಿಸಿಕೊಂಡು ಕದ್ದೊಯ್ದಿದ್ದಾರೆ. ಈಗ ಈ ಘಟನೆ ಇಡೀ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣ&zwj;ವಾಗಿದೆ.&lt;/p&gt;&lt;h3&gt;ಕರಿಬಸವ ಹೆಸರಿನ ಗೂಳಿಯನ್ನ ಗ್ರಾಮಸ್ಥರು ಪೂಜಿಸುತ್ತಿದ್ದರು!&lt;/h3&gt;&lt;p&gt;ಕರಿಬಸವ ಹೆಸರಿನ ಗೂಳಿಗೆ ಗ್ರಾಮಸ್ಥರು, ನೆರೆಹೊರೆಯ ಗ್ರಾಮಸ್ಥರು ಪೂಜಿಸುತ್ತಿದ್ದರು. ನಂದಿಯು ದೇವಸ್ಥಾನ, ಗ್ರಾಮದ ಬೀದಿಗಳು, ಗ್ರಾಮಸ್ಥರ ಮನೆ ಬಾಗಿಲಿಗೆ ಹೋಗಿ ಎಲ್ಲರಿಗೂ ದರ್ಶನ ನೀಡುತ್ತಿತ್ತು. ಮಕ್ಕಳಾದಿಯಾಗಿ ಎಲ್ಲರೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದ ಕರಿಬಸವ ಹೆಸರಿನ ಗೂಳಿಯನ್ನು ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ.&lt;/p&gt;&lt;h3&gt;ಕದ್ದೊಯ್ದವರಿಗೆ ದೇವರು ಒಳ್ಳೇದು ಮಾಡೋಲ್ಲ:&lt;/h3&gt;&lt;p&gt;ಕರಿಬಸವ ಗೂಳಿಯ ಕೊರಳಲ್ಲೊಂದು ದೊಡ್ಡ ಗಂಟೆ ಹಾಗೂ ಸರಪಳಿ ಇತ್ತು. ಇಬ್ಬರು ಮುಸುಕುಧಾರಿ ಜಾನುವಾರುಗಳ್ಳರು ಗೂಳಿ ಕೊರಳಿಗೆ ಹಗ್ಗ ಕಟ್ಟಿ, ಎಳೆದುಕೊಂಡು ಬರುವುದು, ವಾಹನದಲ್ಲಿ ಅದನ್ನು ಹತ್ತಿಸಿಕೊಂಡು, ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಎಲ್ಲ ದೃಶ್ಯಗಳನ್ನು ಸಿಸಿ ಟಿವಿ ಕ್ಯಾಮೆರಾದಲ್ಲಿ ನೋಡಿರುವ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಇಡೀ ಊರಿನ ಜನರು ಭಕ್ತಿಯಿಂದ ಪೂಜಿಸುತ್ತಿದ್ದ ನಮ್ಮೂರಿನ ನಡೆದಾಡುವ ದೇವರನ್ನು ಕದ್ದೊಯ್ದವರಿಗೆ ಒಳ್ಳೆಯದನ್ನಂತೂ ದೇವರು ಮಾಡುವುದಿಲ್ಲ. ಊರಿನ ಬಸವೇಶ್ವರ ದೇವರಿಗೆ ಬಿಟ್ಟಿದ್ದ ಗೂಳಿಯನ್ನು ಯಾರೇ ಕದ್ದೊಯ್ದಿದ್ದರೂ ಪೊಲೀಸರು ಗೂಳಿ ಪತ್ತೆ ಮಾಡಬೇಕು. ಗೂಳಿ ಕಳ್ಳರನ್ನು ಪತ್ತೆ ಮಾಡಿ, ನಮ್ಮ ಕೈಗೆ ಒಪ್ಪಿಸಬೇಕು ಎಂದು ಗ್ರಾಮದ ದೇವಸ್ಥಾನ ಸಮಿತಿ, ಭಕ್ತರು, ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವರ ನಂದಿಯನ್ನು ಕದ್ದೊಯ್ದ ದುಷ್ಕರ್ಮಿಗಳು ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ವಾಹನದ ಶೋಧಕ್ಕೆ ಮುಂದಾಗಿದ್ದಾರೆ.&lt;/p&gt;]]></content:encoded>
            <category>davanagere</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/davanagere-bull-theft-miscreants-in-bolero-steal-sacred-bull-dedicated-to-deity-rav/articleshow-yi1hncz"/>
        </item>
        <item>
            <title><![CDATA[Davanagere: 'ಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರ'; ಆತಂಕ ಮೂಡಿಸಿದ ನಾಗರಪಂಚಮಿ ಕಾರ್ಣಿಕ]]></title>
            <link>https://kannada.asianetnews.com/karnataka-districts/karnikotsava-held-at-kammaragatta-in-davanagere-prophecy-the-pearl-of-the-earth-has-ascended-to-the-sky-was-uttered-sns/articleshow-ymgg072</link>
            <guid isPermaLink="true">https://kannada.asianetnews.com/karnataka-districts/karnikotsava-held-at-kammaragatta-in-davanagere-prophecy-the-pearl-of-the-earth-has-ascended-to-the-sky-was-uttered-sns/articleshow-ymgg072</guid>
            <pubDate>Tue, 18 Aug 2026 09:16:30 +0530</pubDate>
            <description><![CDATA[&lt;p&gt;ದಾವಣಗೆರೆಯ ಕಮ್ಮಾರಗಟ್ಟೆಯಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ 'ಭೂಲೋಕದ ಮುತ್ತು ಗಗನಕ್ಕೇರಿತಲೆ' ಎಂಬ ಭವಿಷ್ಯವಾಣಿ ನುಡಿಯಲಾಗಿದೆ. ಇದು ಮಳೆ ಕೊರತೆ ಹಾಗೂ ಆಹಾರಧಾನ್ಯಗಳ ಬೆಲೆ ಏರಿಕೆಯ ಮುನ್ಸೂಚನೆ ಎಂದು ವಿಶ್ಲೇಷಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m09fckx67xftmh2d1egpyjr8,imgname-davanagere-karnika-1787024527270.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಗರುಡ ಪಂಚಮಿಯಂದು ಸಂಭ್ರಮದ ಕಾರ್ಣಿಕೋತ್ಸವ ನಡೆಯಿತು. ಕುಂಬಳೂರಿನ ಗಣಮಗ ದುಂಡ್ಯಪ್ಪ 'ಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರ' ಎಂಬ ಭವಿಷ್ಯವಾಣಿಯನ್ನು ನುಡಿದರು.&lt;/p&gt;&lt;h2&gt;ಕಮ್ಮಾರಗಟ್ಟೆಯಲ್ಲಿ ಸಂಭ್ರಮದ ಕಾರ್ಣಿಕೋತ್ಸವ&lt;/h2&gt;&lt;p&gt;ಹೆಳವನಕಟ್ಟೆ ಗಿರಿಯಮ್ಮನ ಸಾನಿಧ್ಯದಲ್ಲಿ ಕಮ್ಮಾರಗಟ್ಟೆಯ ಮತ್ತು ಕುಂಬಳೂರಿನ ಆಂಜನೇಯ ಸ್ವಾಮಿಯ ನೇತೃತ್ವದಲ್ಲಿ, ಸುತ್ತಮುತ್ತಲ ಗ್ರಾಮಗಳ ದೇವಾನುದೇವತೆಗಳು ಸಮ್ಮುಖದಲ್ಲಿ ಅದ್ಧೂರಿ ಜಾತ್ರೆಯು ನಡೆಯಿತು. ಸುತ್ತಮುತ್ತಲಿನ ಗ್ರಾಮಗಳ ನವದಂಪತಿಗಳು ಬುಡಮೇಲಾದ ಹುಣಸೆಮರಕ್ಕೆ ಮಂಡಕ್ಕಿ ಎರಚಿ, ಆಂಜನೇಯ ಸ್ವಾಮಿಯ ದರ್ಶನ ಪಡೆದರು. ಜಾತ್ರೆಯಲ್ಲಿ ತಮಗೆ ಇಷ್ಟವಾದ ತಿಂಡಿ, ತಿನಿಸು ಖರಿದೀಸಿದರು. ಮಳೆ ಬಿಡುವು ನೀಡಿದ್ದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.&lt;/p&gt;&lt;h2&gt;ಬೆಲೆ ಏರಿಕೆ ಮುನ್ಸೂಚನೆ ನೀಡಿತಾ ಭವಿಷ್ಯವಾಣಿ?&lt;/h2&gt;&lt;p&gt;ಕಮ್ಮಾರಗಟ್ಟೆಯ ಕಾರ್ಣಿಕೋತ್ಸವದಲ್ಲಿ ಕಾರ್ಣಿಕದ ಭವಿಷ್ಯವಾಣಿಗಾಗಿ ಮೈಸೂರಿನ ಅರಸರು ಕಾಯುತ್ತಿದ್ದರು ಎಂಬ ಪ್ರತೀತಿ ಇದೆ. ಹೀಗಾಗಿ ಇದು ಮಹತ್ವವನ್ನು ಪಡೆದಿದೆ ಎನ್ನುತ್ತಾರೆ ಭಕ್ತರು.&lt;/p&gt;&lt;p&gt;'ಅಶ್ವಿನಿ ಗೂಸು ಬೆಟ್ಟಕ್ಕೇರಿತಲೇ, ಭೂ ಲೋಕದ ಮುತ್ತು ಗಗನಕ್ಕೆ ಏರಿತಲೆ ಎಚ್ಚರ'&amp;nbsp;ಅಂದರೆ ಅಶ್ವಿನಿ ಮಳೆ ಮಾಯವಾಗಿ ಮಳೆ ಕೊರತೆ ಆಗಿದ್ದು ಆಹಾರಧಾನ್ಯಗಳು ಗಗನಕ್ಕೇರುತ್ತೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತೆ ಎಂಬ ಭವಿಷ್ಯವಾಣಿ ಇದಾಗಿದೆ ಅಂತಾ ಭಕ್ತರು ವಿಶ್ಲೇಷಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಅದ್ಧೂರಿ ನಗರ ಪಂಚಮಿ ಹಬ್ಬ&lt;/strong&gt;&lt;/h2&gt;&lt;p&gt;ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಗ ಪಂಚಮಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಕಾರವಾರ ಸೇರಿ ವಿವಿಧ ಕಡೆ ನಾಗ ದೇವಾಲಯಕ್ಕೆ ತೆರಳಿದ ಭಕ್ತರು ನಾಗರ ವಿಗ್ರಹಕ್ಕೆ ಹಾಲು ಹಾಕಿ ಪುನೀತರಾದರು. ಕಾರವಾರದ ಪ್ರತಿಷ್ಠಿತ ನಾಗನಾಥ ದೇವಾಲಯದಲ್ಲಿ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ನಾಗರ ವಿಗ್ರಹಕ್ಕೆ ಹಾಲಿನ ಅಭಿಷೇಕ ಮಾಡಿದರು. ದೇವಾಲಯ&zwnj; ಆಡಳಿತ ಸಮೀತಿಯಿಂದ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿತ್ತು.&lt;/p&gt;&lt;h2&gt;ಹಾಲಿನ ಅಭಿಷೇಕ, ವಿವಿಧ ನೈವೇದ್ಯ&lt;/h2&gt;&lt;p&gt;ಆಚರಿಸಲಾಯಿತು. ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸಿ, ಹಾಲಿನ ಅಭಿಷೇಕ ಮಾಡಿ ಮತ್ತು ವಿವಿಧ ನೈವೇದ್ಯಗಳನ್ನು ಅರ್ಪಿಸಿದರು ದೇವಾಲಯದ ಮುಂಭಾಗದ ನಾಗರಕಟ್ಟೆಗೆ ಭಕ್ತರು ಕುಟುಂಬ ಸಮೇತರಾಗಿ ಬಂದು ನಾಗ ದೇವರಿಗೆ ಪೂಜೆ ಮಾಡಿದರು. ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಹಾಲಿನ ಅಭಿಷೇಕ ಮಾಡಿ, ವಿವಿಧ ರೀತಿಯ ನೈವೇದ್ಯಗಳನ್ನು ಅರ್ಪಿಸುವುದರಿಂದ ದೇವರು ಪ್ರಸನ್ನನಾಗಿ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎಂಬ ನಂಬಿಕೆ ಮನೆ ಮಾಡಿದೆ.&lt;/p&gt;&lt;p&gt;&lt;/p&gt;]]></content:encoded>
            <category>davanagere</category>
            <dc:creator>Sumanth SN</dc:creator>
            <atom:link href="https://kannada.asianetnews.com/karnataka-districts/karnikotsava-held-at-kammaragatta-in-davanagere-prophecy-the-pearl-of-the-earth-has-ascended-to-the-sky-was-uttered-sns/articleshow-ymgg072"/>
        </item>
    </channel>
</rss>
