<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 26 Apr 2026 21:49:54 +0530</lastBuildDate>
        <atom:link href="https://kannada.asianetnews.com/rss/dharwad" rel="self" type="application/rss+xml"/>
        <item>
            <title><![CDATA[ವಿನಯ್‌ ಕುಲಕರ್ಣಿಗೆ ಜೀವಾವಧಿ: ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು]]></title>
            <link>https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw</link>
            <guid isPermaLink="true">https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw</guid>
            <pubDate>Fri, 17 Apr 2026 18:19:23 +0530</pubDate>
            <description><![CDATA[ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹಿಂದೆ ತಾನು ಹೇಳಿದ್ದೇ ಇಂದು ಸತ್ಯವಾಗಿದೆ ಎಂದಿದ್ದಾರೆ. 2019ರಲ್ಲಿ ತಾವೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತ್ತು ಎಂದು ಅವರು ಸ್ಮರಿಸಿಕೊಂಡರು.]]></description>
            <media:content url="https://static.asianetnews.com/images/w-1280,h-720,format-jpg,imgid-01kpdqh461n7b0sf06fd06jsxx,imgname-bs-yediyurappa-1776429863104.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕಮಗಳೂರು (ಏ.17): &lt;/strong&gt;ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆಜಾದ್ ಪಾರ್ಕ್ ವೃತ್ತದಲ್ಲಿ ಮಾತನಾಡಿದ ಅವರು, ಈ ಘಟನೆ ಬಗ್ಗೆ ಏನು ಹೇಳಬೇಕು ಎನ್ನುವುದು ನನಗೆ ತೋಚುತ್ತಿಲ್ಲ. ಆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿಯ ಘಟನೆ ನಡೆಯಬಾರದಿತ್ತು, ಆದರೆ ನಡೆದಿದ್ದು ದುಃಖಕರ. ಅಪರಾಧ ನಡೆದ ಸಂದರ್ಭದಲ್ಲಿ ನಾನು ಹೇಳಬೇಕಿದ್ದನ್ನು ಆಗಲೇ ಹೇಳಿದ್ದೆ. ಇಂದು ನಾನು ಹೇಳಿದ್ದೇ ಸತ್ಯ ಎಂಬಂತೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.&lt;/p&gt;&lt;h2&gt;ಬಿಎಸ್&zwnj;ವೈಗೆ &amp;nbsp;ಜೈಕಾರ ಹಾಕಲು ಕಾರಣ&lt;/h2&gt;&lt;p&gt;2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಾಗ ಇಂದಿನ ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿತ್ತು. ಸಿಬಿಐಗೆ ನೀಡಬೇಕೆಂದು ಯೋಗೇಶ್ ಗೌಡ ಕುಟುಂಬ ಒತ್ತಾಯಿಸಿದ್ರು. ಆದರೆ ಆಗ ಕೇಸ್ ಬಗ್ಗೆ ಯಾವ ಬೆಳವಣಿಗೆಯೂ ನಡೆಯಲಿಲ್ಲ. ಆದರೆ ಮೈತ್ರಿ ಸರ್ಕಾರ ಇದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೇಸ್ ಅನ್ನು 2019ರಲ್ಲಿ ಸಿಬಿಐಗೆ ವಹಿಸಿದರು. ಅಲ್ಲಿಂದ ಈ ಪ್ರಕರಣಕ್ಕೆ ಟರ್ನಿಂಗ್ ಪಾಯಿಂಟ್ ಸಿಕ್ಕಿತು.&lt;/p&gt;&lt;h2&gt;ಘೋಷಣೆ ವೇಳೆ ಗೊಂದಲ&lt;/h2&gt;&lt;p&gt;ಇದಕ್ಕೂ ಮೊದಲು ಚಿಕ್ಕಮಗಳೂರಿಗೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸುವ ವೇಳೆ ಒಂದು ವಿಚಿತ್ರ ಘಟನೆ ಗಮನಸೆಳೆಯಿತು. ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ವೇಳೆ ಗೊಂದಲ ಉಂಟಾಗಿ, ಕೆಲವರು ತಪ್ಪಾಗಿ ಯಡಿಯೂರಪ್ಪ ವಿರುದ್ಧವೇ ಘೋಷಣೆ ಕೂಗಲು ಮುಂದಾದರು. ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸಿದ ಯಡಿಯೂರಪ್ಪನವರಿಗೆ ಜೈ ಎಂದು ಘೋಷಣೆ ಕೂಗುವ ವೇಳೆ, ಕೆಲವರು ತಪ್ಪಾಗಿ ವಿರೋಧದ ಘೋಷಣೆ ಕೂಗಿದಂತಾಗಿದೆ. ನಂತರ ತಕ್ಷಣವೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕಾರ್ಯಕರ್ತರು ತಮ್ಮ ಘೋಷಣೆಯನ್ನು ನಿಲ್ಲಿಸಿದರು. ಈ ಘಟನೆ ಸ್ಥಳದಲ್ಲಿದ್ದವರ ಗಮನಸೆಳೆಯಿತು.&lt;/p&gt;&lt;h2&gt;ಚಿಕ್ಕಮಗಳೂರಿನಲ್ಲಿ ಬಿ.ಎಸ್.ವೈ. ವಾಸ್ತವ್ಯ&lt;/h2&gt;&lt;p&gt;ಬಿ.ಎಸ್. ಯಡಿಯೂರಪ್ಪ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು, ನಾಳೆ ಲಿಂಗಾಯಿತ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈತ್ರಾದೇವಿ-ಯಡಿಯೂರಪ್ಪ ವೀರಶೈವ ಲಿಂಗಾಯಿತ ಸಮುದಾಯ ಭವನವು ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ಈ ಭವನ ನಿರ್ಮಾಣವಾಗಿದೆ. ಕಾರ್ಯಕ್ರಮದ ಬಳಿಕ ಅವರು ನಾಳೆ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/state/bs-yediyurappa-reacts-to-vinay-kulkarni-life-sentence-emotional-statement-in-chikkamagaluru-gdp/articleshow-15e2arw"/>
        </item>
        <item>
            <title><![CDATA[ಯೋಗೇಶ್ ಗೌಡ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!]]></title>
            <link>https://kannada.asianetnews.com/state/vinay-kulkarni-moves-high-court-challenging-life-sentence-in-yogesh-gowda-murder-case-gdp/articleshow-24l36x8</link>
            <guid isPermaLink="true">https://kannada.asianetnews.com/state/vinay-kulkarni-moves-high-court-challenging-life-sentence-in-yogesh-gowda-murder-case-gdp/articleshow-24l36x8</guid>
            <pubDate>Sat, 25 Apr 2026 09:47:25 +0530</pubDate>
            <description><![CDATA[ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ, ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಅವರು ಶಿಕ್ಷೆಗೆ ತಡೆಯಾಜ್ಞೆ ಕೋರಿದ್ದು, ಈ ಕಾನೂನು ಹೋರಾಟದ ಮುಂದಿನ ಹಂತವು ತೀವ್ರ ಕುತೂಹಲ ಕೆರಳಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp7v1w3ssae3zg146z32qbb3,imgname-vinay-kulkarni-and-yogesh-gowda--1--1776232231033.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಶಾಸಕ ವಿನಯ್ ಕುಲಕರ್ಣಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.&lt;/p&gt;&lt;p&gt;ಸೆಷನ್ಸ್ ಕೋರ್ಟ್ ವಿಧಿಸಿದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ, ಅದರ ಜಾರಿಗೆ ತಾತ್ಕಾಲಿಕ ತಡೆ ನೀಡುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ಕೊಟ್ಟಿರೋ ಜೀವಾವಧಿ ಶಿಕ್ಷೆಯ ಅಮಾನತು ಹಾಗೂ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿರುವ ಈ ಅರ್ಜಿ, ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಚಂದ್ರಶೇಖರ್ ಇಂಡಿ ಕೂಡ ಮೇಲ್ಮನವಿ&lt;/h2&gt;&lt;p&gt;ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮಾತ್ರವಲ್ಲದೆ, ಸಹ ಆರೋಪಿಯಾಗಿರುವ ಚಂದ್ರಶೇಖರ್ ಇಂಡಿ ಕೂಡ ತಮ್ಮ ಮೇಲ್ಮನವಿಯನ್ನು ಹೈಕೋರ್ಟ್&zwnj;ಗೆ ಸಲ್ಲಿಸಿದ್ದಾರೆ. ಸೆಷನ್ಸ್ ಕೋರ್ಟ್ ತೀರ್ಪಿನ ಬಳಿಕ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ವಿನಯ್ ಕುಲಕರ್ಣಿ, ಇದೀಗ ಕಾನೂನು ಹೋರಾಟದ ಮೂಲಕ ನ್ಯಾಯಾಲಯದಿಂದ ಪರಿಹಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ.&lt;/p&gt;&lt;p&gt;ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ ಪಡೆಯುವ ಮೂಲಕ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ವಿನಯ್ ಕುಲಕರ್ಣಿ ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಕೋರ್ಟ್&zwnj;ನಲ್ಲಿ ನಡೆಯಲಿರುವ ವಿಚಾರಣೆ ಈ ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ ಎಂಬುದರಿಂದ, ನ್ಯಾಯಾಂಗದ ತೀರ್ಪಿನತ್ತ ಎಲ್ಲರ ಕಣ್ಣು ನೆಟ್ಟಿದೆ.&lt;/p&gt;&lt;h2&gt;ಮುಂದಿರುವ &amp;nbsp;ಆಯ್ಕೆಗಳು&lt;/h2&gt;&lt;p&gt;ಇನ್ನು ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್&zwnj; ಕುಲಕರ್ಣಿಗೆ ಜೈಲಿನ ಅಧಿಕಾರಿಗಳು 16110 ಸಜಾ ಕೈದಿ ಸಂಖ್ಯೆ ನೀಡಿದ್ದಾರೆ. ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಏಪ್ರಿಲ್ 17ರಂದು ಸೆಷನ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಲ್ಲದೆ ಒಬ್ಬ ಅಪರಾಧಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಒಂದು ವೇಳೆ ಸೆಷನ್ ಕೋರ್ಟ್ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡದರೆ. ಈ ಆದೇಶವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಕಾನೂನಿನಲ್ಲಿ ಅವಕಾಶವಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/state/vinay-kulkarni-moves-high-court-challenging-life-sentence-in-yogesh-gowda-murder-case-gdp/articleshow-24l36x8"/>
        </item>
        <item>
            <title><![CDATA[Dharwad: ಹೈದರ್‌ಶಾವಲಿ ದರ್ಗಾ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ಬಿಡುಗಡೆ; ಭೂಮಿಪೂಜೆ]]></title>
            <link>https://kannada.asianetnews.com/karnataka-districts/rs-25-lakh-grant-released-for-development-of-haidershawali-dargah-bhoomi-pooja-mrq/articleshow-2ggwydp</link>
            <guid isPermaLink="true">https://kannada.asianetnews.com/karnataka-districts/rs-25-lakh-grant-released-for-development-of-haidershawali-dargah-bhoomi-pooja-mrq/articleshow-2ggwydp</guid>
            <pubDate>Sun, 26 Apr 2026 07:43:42 +0530</pubDate>
            <description><![CDATA[&lt;p&gt;ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಧಾರವಾಡದ ಹೈದರ್&zwnj;ಶಾವಲಿ ದರ್ಗಾ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮಫೀರ್&zwnj; ಖಾದ್ರಿ ತಿಳಿಸಿದ್ದಾರೆ. ಹಜರತ್ ಸಯ್ಯದ್ ಶಾ ದರ್ಗಾ ಆವರಣದಲ್ಲಿ ನಡೆದ ಭೂಮಿಪೂಜೆ ಸಮಾರಂಭ ನಡೆಯಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq3rmgw6qva1g3ker6ewn202,imgname-dargah-1777169220486.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಲ್ಲಿನ ಹೈದರ್&zwnj;ಶಾವಲಿ ದರ್ಗಾ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜೀಮಫೀರ್&zwnj; ಖಾದ್ರಿ ಹೇಳಿದರು.&lt;/p&gt;&lt;p&gt;ಪಟ್ಟಣದ ಹರಭಟ್ ಹೈಸ್ಕೂಲ್ ಹತ್ತಿರವಿರುವ ಹಜರತ್ ಸಯ್ಯದ್ ಶಾ ದರ್ಗಾ ಆವರಣದಲ್ಲಿ ದರ್ಗಾದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.&lt;/p&gt;&lt;h2&gt;&lt;strong&gt;ದರ್ಗಾ, ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ&lt;/strong&gt;&lt;/h2&gt;&lt;p&gt;ವಸತಿ ಮತ್ತು ವಕ್ಫ್&zwnj; ಸಚಿವ ಜಮೀರ್&zwnj; ಅಹ್ಮದ್ ಅವರು ರಾಜ್ಯಾದ್ಯಂತ ಹಲವು ದರ್ಗಾ, ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರು.&lt;/p&gt;&lt;p&gt;ಪಂಚ ಗ್ಯಾರಂಟಿ ಸಮಿತಿ ಮಾಜಿ ಅಧ್ಯಕ್ಷ ಶಿವಾನಂದ ಬೆಂತೂರ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಗದೀಶ ಉಪ್ಫಿನ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್ ಮಾತನಾಡಿದರು.&lt;/p&gt;&lt;p&gt;ಅಂಜುಮನ್ ಸಂಸ್ಥೆಯ ಅಧ್ಯಕ್ಷ ಖೈಯೀಮ್ ನಾಲಬಂದ, ಪಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ&zwnj; ಸಲೀಂ ಕ್ಯಾಲಕೊಂಡ, ತೈಯಬ್ ಜಂಗ್ಲಿ ಬಾಬಾ, ರಸೂಲ್ ಅಲ್ಲಾ ಮುಲ್ಲಾ, ಖಾದರಸಾಬ್&zwnj; ದಾದಿಮನಿ, ಮಲಿಕ್ ಶಿರೂರ, ಛಾಯಪ್ಪ ಹೊಸಮನಿ, ಹಾಲಪ್ಪ ತಡಹಾಳ, ಮಲ್ಲೇಶ ಬೆಳವಡಿ ಸೇರಿದಂತೆ ಹಲವರಿದ್ದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rs-25-lakh-grant-released-for-development-of-haidershawali-dargah-bhoomi-pooja-mrq/articleshow-2ggwydp"/>
        </item>
        <item>
            <title><![CDATA[ಪ್ರೀ ಫೈರ್ ಗೇಮ್ ಚಟ: ಅಮ್ಮ ಗೇಮ್ ಆಡೋಕೆ ಫೋನ್ ಕೊಟ್ಟಿಲ್ಲ ಅಂತ ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಬಾಲಕ]]></title>
            <link>https://kannada.asianetnews.com/state/boy-hangs-himself-in-his-mothers-saree-after-mom-refused-to-give-him-phone/articleshow-2n7wqoc</link>
            <guid isPermaLink="true">https://kannada.asianetnews.com/state/boy-hangs-himself-in-his-mothers-saree-after-mom-refused-to-give-him-phone/articleshow-2n7wqoc</guid>
            <pubDate>Fri, 24 Apr 2026 13:32:59 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯಲ್ಲಿ, ಪ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಗೇಮ್ ಆಡೋಕೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯು ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಚಟದ ಅಪಾಯವನ್ನು ಸೂಚಿಸುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpz7s3w9gs55yrz23zsxw40q,imgname-mobile-phone-addiction-1777017327497.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಹುಬ್ಬಳ್ಳಿ : ಮೊಬೈಲ್ ಕೊಟ್ಟಿಲ್ಲ ಅಂತ 14 ವರ್ಷದ ಸಮರ್ಥ ಸಾವಿಗೆ ಶರಣು&lt;/strong&gt;&lt;/h2&gt;&lt;p&gt;ಹುಬ್ಬಳ್ಳಿ: ಮೊಬೈಲ್ ಕೊಡದೇ ಇದ್ದದಕ್ಕೆ ಬಾಲಕ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. 14 ವರ್ಷದ ಸಮರ್ಥ ಸಾವಿಗೆ ಶರಣಾದ ಬಾಲಕ. ಮೃತ ಬಾಲಕ ಪ್ರೀ ಫೈರ್ ಗೇಮ್&zwnj;ನ ಚಟಕ್ಕೆ ಬಿದ್ದಿದ್ದ. ಬಾಲಕನ ಮೊಬೈಲ್ ಚಟ ನೋಡಿದ ಪೋಷಕರು ಬಾಲಕನಿಗೆ ಬುದ್ಧಿ ಹೇಳಿದ್ದರು. ನಿನ್ನೆ ರಾತ್ರಿ ಬಾಲಕನ ತಾಯಿ ಮಗನಿಗೆ ಮೊಬೈಲ್ ಗೇಮ್ ಆಡದಂತೆ ಬುದ್ಧಿ ಹೇಳಿದ್ದಾರೆ. ಇಷ್ಟಕ್ಕೆ ನೊಂದು ಬಾಲಕ ಸಾವಿಗೆ ಶರಣಾಗಿದ್ದಾನೆ. ರಾತ್ರಿ ಕೋಣೆಗೆ ಹೋದ ಬಾಲಕ ಅಮ್ಮನ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕಿಮ್ಸ್&zwnj;ಗೆ ಹುಬ್ಬಳಿ ಪೊಲೀಸ್ ಕಮೀಷನರ್&zwnj; ಎನ್&zwnj; ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h3&gt;&lt;strong&gt;ಮೊಬೈಲ್ ಫೋನ್&zwnj;ಗೆ ಆಡಿಕ್ಟ್ ಆಗ್ತಿರುವ ಪುಟ್ಟ ಮಕ್ಕಳು&lt;/strong&gt;&lt;/h3&gt;&lt;p&gt;ಇತ್ತೀಚೆಗೆ ಸಣ್ಣ ಸಣ್ಣ ಮಕ್ಕಳು ಮೊಬೈಲ್&zwnj; ಚಟಕ್ಕೆ ತೀವ್ರವಾಗಿ ಅಡಿಕ್ಟ್ ಆಗಿದ್ದು, ಮೊಬೈಲ್ ಇಲ್ಲದೇ ಜೀವವೇ ಇಲ್ಲ ಎಂಬಂತಾಗಿದ್ದಾರೆ. ರಾಜ್ಯ ಸರ್ಕಾರ ಮಕ್ಕಳು ಮೊಬೈಲ್ ಚಟಕ್ಕೆ ದಾಸರಾಗಬಾರದೆಂದು 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್&zwnj; ನಿಷೇಧ ಮಾಡಿದೆ. ಮಕ್ಕಳಿಗೆ ಮೊಬೈಲ್ ಮೂಲಕ ಯಾವುದೇ ಪಠ್ಯಗಳನ್ನು ಕಳುಹಿಸದಂತೆ ಶಾಲೆಗಳಿಗೂ ಆದೇಶಿಸಲಾಗಿದೆ. ಆದರೂ ಮಕ್ಕಳು ಪೋಷಕರ ಮೊಬೈಲ್ ಪಡೆದು ಮೊಬೈಲ್ ಫೋನ್&zwnj;ಗಳಿಗೆ ಅಡಿಕ್ಟ್ ಆಗಿ ಜೀವ ಕಳೆದುಕೊಳ್ಳುತ್ತಿದ್ದಾರೆ ಅಥವಾ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಪೋಷಕರೇ ಈ ಬಗ್ಗೆ ಜಾಗರೂಕರಾಗಿ ಮಕ್ಕಳನ್ನು ಮೊಬೈಲ್ ಬದಲು ಬೇರೆ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕಿದೆ. ಇಲ್ಲದೇ ಹೋದರೆ ಅಪಾಯ ಗ್ಯಾರಂಟಿ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಳ್ಳಾರಿ: ಏರುತ್ತಿರುವ ಬಿಸಿಲ ತಾಪದ ನಡುವೆ: ರಸ್ತೆ ಅಗಲೀಕರಣಕ್ಕಾಗಿ 30ಕ್ಕೂ ಹೆಚ್ಚು ಮರಗಳ ತೆರವು&lt;/strong&gt;&lt;strong&gt;&amp;nbsp;&lt;/strong&gt;&lt;/p&gt;&lt;p&gt;&lt;strong&gt;ವಿಶೇಷ ಮನವಿ:&lt;/strong&gt;&lt;/p&gt;&lt;p&gt;ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:&lt;/p&gt;&lt;p&gt;Sahai Helpline - 080 2549 7777&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Anusha Kb</dc:creator>
            <atom:link href="https://kannada.asianetnews.com/state/boy-hangs-himself-in-his-mothers-saree-after-mom-refused-to-give-him-phone/articleshow-2n7wqoc"/>
        </item>
        <item>
            <title><![CDATA[ಮೂರು ನಗರ, ಮೂರು ದುರಂತ: ಪೋಕ್ಸೋ ಕೇಸ್ ಖೈದಿ ಜೈಲಿನಲ್ಲಿ ಆತ್ಮ*ಹತ್ಯೆ, ಪ್ರಿಯತಮೆ ಹಲ್ಲೆ ಮಾಡಿದ್ದಕ್ಕೆ ಪ್ರೇಮಿ ಸಾವು!]]></title>
            <link>https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5</link>
            <guid isPermaLink="true">https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5</guid>
            <pubDate>Sat, 25 Apr 2026 14:51:19 +0530</pubDate>
            <description><![CDATA[&lt;p&gt;ಧಾರವಾಡ ಕಾರಾಗೃಹದಲ್ಲಿ ಪೋಕ್ಸೋ ಆರೋಪಿ, ಪ್ರೀತಿ ನಿರಾಕರಣೆಯಿಂದ ಶಿವಮೊಗ್ಗದಲ್ಲಿ ಯುವಕ, ಮತ್ತು ಆನ್&zwnj;ಲೈನ್ ಗೇಮ್ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಬಾಲಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಮೂರು ಪ್ರತ್ಯೇಕ ಘಟನೆಗಳು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq1ynpgztm4ctz5wbzha2nqh,imgname-dharwad-jail-1777108441631.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಮೃತ ಖೈದಿಯನ್ನು ಮಹಾಂತೇಶ್ ಕುಂಬಾರ್ (29) ಎಂದು ಗುರುತಿಸಲಾಗಿದೆ. ಅವರು ಪೋಕ್ಸೋ (POCSO) ಪ್ರಕರಣದಡಿ ಬಂಧನಕ್ಕೊಳಗಾಗಿ ಕಾರಾಗೃಹದಲ್ಲಿ ಇರಿಸಲಾಗಿತ್ತು ಎನ್ನಲಾಗಿದೆ. ಆದರೆ, ಜೈಲಿನಲ್ಲಿದ್ದ ಸಂದರ್ಭದಲ್ಲಿ ಮಹಾಂತೇಶ್ ಕುಂಬಾರ್ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.&lt;/p&gt;&lt;p&gt;ಘಟನೆಯ ಮಾಹಿತಿ ತಿಳಿದ ತಕ್ಷಣ ಧಾರವಾಡ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮ*ಹತ್ಯೆಗೆ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಕಾರಾಗೃಹದ ಒಳಾಂಗಣ ಪರಿಸ್ಥಿತಿ ಹಾಗೂ ಘಟನೆಯ ಹಿನ್ನೆಲೆ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.&lt;/p&gt;&lt;p&gt;ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಆತ್ಮ*ಹತ್ಯೆಯ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ. ಈ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.&lt;/p&gt;&lt;h2&gt;ಪ್ರಿಯತಮೆ ಹಲ್ಲೆ ಮಾಡಿದ್ದಕ್ಕೆ ವಿಷ ಸೇವಿಸಿದ್ದ ಯುವಕ ಕೊನೆಯುಸಿರು&lt;/h2&gt;&lt;p&gt;ಶಿವಮೊಗ್ಗ: ಪ್ರೀತಿ ನಿರಾಕರಣೆ ಹಾಗೂ ಯುವತಿಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಮೃತ. ತೀರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಶಬರೀಶ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಪ್ರೇಮಕ್ಕೆ ಮನೆಯವರ ವಿರೋಧವಿತ್ತು. ಈ ಮಧ್ಯೆ ಯುವತಿಯು ಶಬರೀಶ್&zwnj;ಗೆ ಕರೆ ಮಾಡಿ, ನಿನ್ನ ಬಳಿ ಮಾತನಾಡಬೇಕು. ಶಿವಮೊಗ್ಗದ ಬಸ್ ನಿಲ್ದಾಣಕ್ಕೆ ಬಾ ಎಂದಿದ್ದಳು. ಶಬರೀಶ್ ಅಲ್ಲಿಗೆ ಹೋದಾಗ ಮಾತಿನ ಚಕಮಕಿ ನಡೆದಿದ್ದು, ತನ್ನ ಸಂಬಂಧಿಕರೊಂದಿಗೆ ಸೇರಿ ಶಬರೀಶ್ ಮೇಲೆ ಯುವತಿ ಹಲ್ಲೆ ನಡೆಸಿದ್ದಾಳೆ. ಇದರಿಂದ ಮನನೊಂದ ಶಬರೀಶ್, ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿದ್ದ. ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಏ.22ರಂದು ಶಬರೀಶ್ ಮೃತಪಟ್ಟಿದ್ದಾನೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h2&gt;ಆನ್ಲೈನ್&zwnj; ಗೇಮ್&zwnj; ಆಡಬೇಡ ಎಂದಿದ್ದಕ್ಕೆ ಬಾಲಕ ನೇಣಿಗೆ&lt;/h2&gt;&lt;p&gt;ಹುಬ್ಬಳ್ಳಿ: ಮೊಬೈಲ್&zwnj;ನಲ್ಲಿ ಆನ್&zwnj;ಲೈನ್ ಗೇಮ್ ಆಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಬಾಲಕನೋರ್ವ ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಇಲ್ಲಿನ ಉದಯನಗರದಲ್ಲಿ ನಡೆದಿದೆ. ಸಮರ್ಥ ಪಟಕೆ (14) ಮೃತ ಬಾಲಕ. ಈತ ಹೆಚ್ಚಾಗಿ ಮೊಬೈಲ್&zwnj;ನಲ್ಲಿ ವೀಡಿಯೋ ಗೇಮ್ ಆಡುತ್ತಿದ್ದ. ಇದರಿಂದ ವಿದ್ಯಾಭ್ಯಾಸ ಹಾಳಾಗುತ್ತದೆ ಎಂದು ಪಾಲಕರು ಬುದ್ಧಿ ಹೇಳಿದ್ದರು, ಅಷ್ಟಾದರೂ ಬಿಟ್ಟಿರಲಿಲ್ಲ. ಗುರುವಾರ ರಾತ್ರಿ 9.30ಕ್ಕೆ ಮೊಬೈಲ್&zwnj;ನಲ್ಲಿ ಗೇಮ್ ಆಡುತ್ತಿದ್ದ ವೇಳೆ ಆತನ ತಾಯಿ ಬೈದು ಮೊಬೈಲ್ ಕಸಿದುಕೊಂಡಿದ್ದಾರೆ. ಇದೇ ವಿಚಾರಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/dharwad-jail-undertrial-prisoner-in-pocso-case-found-dead-in-central-prison-gdp/articleshow-31vard5"/>
        </item>
        <item>
            <title><![CDATA[ಬತ್ತಿದ ಜಲಮೂಲ,  ಧಾರವಾಡ ಜಿಲ್ಲೆಯ 15 ಹಳ್ಳಿಗೆ ನೀರಿನ ಬರ; ಗ್ರಾಮಗಳ ಸಂಖ್ಯೆ ಹೆಚ್ಚಾಗುವ ಆತಂಕ]]></title>
            <link>https://kannada.asianetnews.com/karnataka-districts/dharwad-summer-heat-causes-severe-drinking-water-problem-in-15-villages-mrq/articleshow-6f76fuq</link>
            <guid isPermaLink="true">https://kannada.asianetnews.com/karnataka-districts/dharwad-summer-heat-causes-severe-drinking-water-problem-in-15-villages-mrq/articleshow-6f76fuq</guid>
            <pubDate>Wed, 22 Apr 2026 07:32:14 +0530</pubDate>
            <description><![CDATA[&lt;p&gt;ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೇಸಿಗೆಯ ತಾಪಮಾನದಿಂದಾಗಿ 15 ಹಳ್ಳಿಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೆರೆಗಳು ಮತ್ತು ಬೋರ್&zwnj;ವೆಲ್&zwnj;ಗಳು ಬತ್ತುತ್ತಿರುವುದರಿಂದ, ಜಿಲ್ಲಾಡಳಿತವು ಖಾಸಗಿ ಬೋರ್&zwnj;ವೆಲ್&zwnj;ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpsernnjrgydmca8kthy6dd1,imgname-dharwad-1776823326386.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಾನಂದ ಗೊಂಬಿ&lt;/strong&gt;&lt;/p&gt;&lt;p&gt;&lt;strong&gt;ಹುಬ್ಬಳ್ಳಿ: &lt;/strong&gt;ಬೇಸಿಗೆಯ ಬೇಗೆಯಿಂದ ಕುಡಿಯುವ ನೀರಿನ ತತ್ವಾರ ಶುರುವಾಗಿದ್ದು ಸದ್ಯ ಧಾರವಾಡ ಜಿಲ್ಲೆಯ 15 ಹಳ್ಳಿಗಳಲ್ಲಿ ಸಮಸ್ಯೆ ತಲೆದೋರಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹಳ್ಳಿಗಳ ಸಂಖ್ಯೆ ಮೂರ್ನಾಲ್ಕು ಪಟ್ಟು ಹೆಚ್ಚಾಗುವ ಆತಂಕ ಅಧಿಕಾರಿಗಳಲ್ಲಿ ಮನೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಖಾಸಗಿ ಬೋರ್&zwnj;ವೆಲ್&zwnj; ಗುರುತಿಸಿದ್ದು ಅಗತ್ಯ ಬಿದ್ದರೆ ಬಳಸಿಕೊಳ್ಳಲು ಮುಂದಾಗಿದ್ದಾರೆ.&lt;/p&gt;&lt;p&gt;ಕಳೆದ 10 ವರ್ಷಗಳಲ್ಲೇ ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ಬಿಸಿಲು ಪ್ರಮಾಣ ಏರಿಕೆಯಾಗಿದೆ. 2016ರಲ್ಲಿ 40-41 ಡಿಗ್ರಿ ಸೆಲ್ಸಿಯಸ್&zwnj; ಇದ್ದರೆ ಉಳಿದಂತೆ 37-38ರ ಆಸುಪಾಸಿನಲ್ಲೇ ಇತ್ತು. ಆದರೆ, ಈ ವರ್ಷ ಈಗಲೇ 38ರಿಂದ 39 ಡಿಗ್ರಿ ಸೆಲ್ಸಿಯಸ್&zwnj; ದಾಟಿದೆ. ಇದರಿಂದ ಕೆರೆ, ಹಳ್ಳ-ಕೊಳ್ಳ ಬತ್ತಿ ಜನ- ಜಾನುವಾರು ನೀರಿಗಾಗಿ ಪರಿತಪಿಸುವಂತೆ ಆಗಿದೆ. ಪ್ರಾಣಿ-ಪಕ್ಷಿ ನೀರಿಗಾಗಿ ಹಪಹಪಿಸಿದರೆ, ರಸ್ತೆ ಬದಿ ನೆಟ್ಟ ಗಿಡ ಒಣಗುತ್ತಿವೆ. ಅಂತರ್ಜಲಮಟ್ಟ ಕುಸಿಯುತ್ತಿದ್ದು ಬೋರ್&zwnj;ವೆಲ್&zwnj; ಬತ್ತುತ್ತಿವೆ. ಇದರಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುತ್ತಿದೆ.&lt;/p&gt;&lt;h2&gt;&lt;strong&gt;ಜಿಲ್ಲೆಯಲ್ಲಿರುವ ಕೆರೆಗಳೆಷ್ಟು?&lt;/strong&gt;&lt;/h2&gt;&lt;p&gt;ಜಿಲ್ಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರ, ವಿವಿಧ ಪಟ್ಟಣ, ಗ್ರಾಮ ಸೇರಿ 1000ಕ್ಕೂ ಅಧಿಕ ಕೆರೆಗಳಿದ್ದು 150-200 ಕೆರೆ ನೀರನ್ನು ಕುಡಿಯಲು ಬಳಸಲಾಗುತ್ತಿದೆ.&lt;/p&gt;&lt;p&gt;ಜಿಲ್ಲೆಯಲ್ಲಿ 370ಕ್ಕೂ ಹೆಚ್ಚು ಗ್ರಾಮಗಳಿದ್ದು 90ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಲಕ್ಷಣಗಳಿವೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ಸದ್ಯ 15 ಗ್ರಾಮಗಳಲ್ಲಿ 15 ದಿನದಿಂದ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದ್ದು ಆಡಳಿತ ಯಂತ್ರ ನೀರೊದಗಿಸಲು ಹರಸಾಹಸ ಪಡುತ್ತಿದೆ.&lt;/p&gt;&lt;h3&gt;&lt;strong&gt;ಯಾವ್ಯಾವ ಗ್ರಾಮ?&lt;/strong&gt;&lt;/h3&gt;&lt;p&gt;ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಬೇಗೂರ, ಮುಗದ, ಮನಗುಂಡಿ, ಹುಬ್ಬಳ್ಳಿ ತಾಲೂಕಿನ ಅದರಗುಂಚಿ, ಕುರಡಿಕೇರಿ, ನೂಲ್ವಿ, ಛಬ್ಬಿ, ಕಲಘಟಗಿ ತಾಲೂಕಿನ ನೆಲಹರವಿ, ಬಿ. ಹೂಲಿಕಟ್ಟಿ, ದ್ಯಾಮನಕೊಂಡ, ಮುಕ್ಕಲ, ಹಿರೇಹುಣಸಿಕಟ್ಟಿ, ಕೂಡಲಗಿ ಸೇರಿ 15 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕ್ಕೇರಿದೆ. ಈ ಮೊದಲು ಕೆರೆಯಲ್ಲಿ ಸಂಗ್ರಹಗೊಂಡಿರುವ ನೀರನ್ನು ಶುದ್ಧೀಕರಿಸಿ ಮನೆ-ಮನೆಗೆ ಸರಬರಾಜು ಮಾಡಲಾಗುತ್ತಿತ್ತು. ಇದೀಗ ಕೆರೆ ಬತ್ತಿದ ಪರಿಣಾಮ ಸ್ಥಳೀಯ ಆಡಳಿತ ವರ್ಷಕ್ಕೆ ₹ 12000 ಬಾಡಿಗೆ ನೀಡಿ ಖಾಸಗಿ ಬೋರ್&zwnj;ವೆಲ್&zwnj;ನಿಂದ ನೀರು ಪಡೆದು ಶುದ್ಧೀಕರಿಸಿ ಜನರಿಗೆ ನೀಡುತ್ತಿದ್ದರೂ ದಾಹ ಮಾತ್ರ ನೀಗುತ್ತಿಲ್ಲ. ಇನ್ನು 90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಮುನ್ನಚ್ಚರಿಕಾ ಕ್ರಮವಾಗಿ 180 ಖಾಸಗಿ ಬೋರ್&zwnj;ವೆಲ್&zwnj; ಗುರುತಿಸಲಾಗಿದೆ. ಅಗತ್ಯ ಬಿದ್ದರೆ ಈ ಬೋರ್&zwnj;ವೆಲ್&zwnj; ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ತಿಳಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;37 ವರ್ಷದ ಮಹಿಳೆ 22ರ ಯುವಕನ ಪ್ರೀತಿಸಿ ಮದುವೆ, 14 ವರ್ಷದ ಮಗನನ್ನು ಬಿಟ್ಟು ಬಂದವಳಿಗೆ ಜೀವ ಬೆದರಿಕೆ, ಪೊಲೀಸ್ ರಕ್ಷಣೆ ಕೋರಿದ ಜೋಡಿ!&lt;/strong&gt;&lt;/p&gt;&lt;p&gt;ಒಟ್ಟಿನಲ್ಲಿ ಏರುತ್ತಿರುವ ತಾಪಮಾನದಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು ಅಧಿಕಾರಿಗಳ ನಿದ್ದೆಗೆಡಿಸಿದೆ. ತಕ್ಷಣ ಮಳೆಯಾಗಿ ಕೆರೆಗಳು ಭರ್ತಿಯಾದರೆ ನೀರಿನ ತಾಪತ್ರಯ ತಪ್ಪುತ್ತದೆ ಎನ್ನುತ್ತಿದ್ದಾರೆ ಅಧಿಕಾರಿಗಳು.&lt;/p&gt;&lt;p&gt;ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 90 ಗ್ರಾಮಗಳನ್ನು ಗುರುತಿಸಿದ್ದು ಸದ್ಯಕ್ಕೆ 15 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಇಲ್ಲಿ 17 ಬೋರ್&zwnj;ವೆಲ್&zwnj; ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಧಾರವಾಡ ಜಿ.ಪಂ.ನ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ್ ಪಾಟೀಲ್ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತಂದೆ, ತಾಯಿಗೆ ನಾನು ಒಳ್ಳೆ ಮಗ ಆಗಲಿಲ್ಲ, ಈಗ ಹೆಸರು ಗಳಿಸಲೂ ಆಗುತ್ತಿಲ್ಲ: ನಲಪಾಡ್&zwnj;&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dharwad-summer-heat-causes-severe-drinking-water-problem-in-15-villages-mrq/articleshow-6f76fuq"/>
        </item>
        <item>
            <title><![CDATA[Hubballi: Fly91 ವಿಮಾನಕ್ಕೆ ಮಾತ್ರ ಹವಾಮಾನ ವೈಪರೀತ್ಯ ಹೇಗೆ ಸಾಧ್ಯ? ಸತ್ಯ ಮುಚ್ಚಿಟ್ಟರಾ?]]></title>
            <link>https://kannada.asianetnews.com/karnataka-districts/hubballi-airport-how-can-extreme-weather-be-the-only-thing-that-can-happen-to-fly91-airlines-mrq/articleshow-9gt9wey</link>
            <guid isPermaLink="true">https://kannada.asianetnews.com/karnataka-districts/hubballi-airport-how-can-extreme-weather-be-the-only-thing-that-can-happen-to-fly91-airlines-mrq/articleshow-9gt9wey</guid>
            <pubDate>Tue, 21 Apr 2026 07:22:41 +0530</pubDate>
            <description><![CDATA[ಹೈದರಾಬಾದ್&zwnj;ನಿಂದ ಹುಬ್ಬಳ್ಳಿಗೆ ಬಂದ ಫ್ಲೈ-91 ವಿಮಾನ, ಲ್ಯಾಂಡಿಂಗ್ ಸಮಸ್ಯೆಯಿಂದಾಗಿ 3 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಿತು. ತಾಂತ್ರಿಕ ದೋಷವೆಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೆ, ಹವಾಮಾನ ವೈಪರೀತ್ಯವೇ ಕಾರಣವೆಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kppvrtm5v03xr3qbcwrm95wk,imgname-hubballi-airport-1776736299653.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ:&lt;/strong&gt; ಹೈದರಾಬಾದ್&zwnj;-ಹುಬ್ಬಳ್ಳಿ-ಬೆಂಗಳೂರ ನಡುವೆ ಎರಡು ದಿನದ ಹಿಂದೇ (ಏ.17) ವಿಮಾನ ಸೇವೆ ಆರಂಭಿಸಿದ್ದ ಫ್ಲೈ-91 ಭಾನುವಾರ ಹುಬ್ಬಳ್ಳಿಯಲ್ಲಿ ಲ್ಯಾಂಡ್&zwnj; ಆಗದೆ ಬರೋಬ್ಬರೀ 3 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಸುತ್ತಿದೆ. ಬಳಿಕ ಬೆಂಗಳೂರಿಗೆ ತೆರಳಿ ಸುರಕ್ಷಿತವಾಗಿ ಲ್ಯಾಂಡ್&zwnj; ಆಗಿದೆ. ಪ್ರಯಾಣಿಕರು ತಾಂತ್ರಿಕ ಕಾರಣವೆಂದರೆ, ಅಧಿಕಾರಿಗಳು ಹವಾಮಾನ ವೈಪರೀತ್ಯದಿಂದ ಹೀಗಾಗಿದೆ ಎಂದು ಹೇಳಿದ್ದಾರೆ.&lt;/p&gt;&lt;p&gt;18 ಜನ ಪ್ರಯಾಣಿಕರು ಸೇರಿದಂತೆ ವಿಮಾನದಲ್ಲಿದ್ದ 25ಕ್ಕೂ ಹೆಚ್ಚು ಜನರು ಸುರಕ್ಷಿತವಾಗಿದ್ದಾರೆ. ಆದರೆ, ಪ್ರಯಾಣಿಕರು ಭಯಭೀತರಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್&zwnj; ಆಗಿವೆ. ಫ್ಲೈ-91 ಸೇವೆ ಆರಂಭಿಸಿ ಎರಡೇ ದಿನದಲ್ಲಿ ಈ ಘಟನೆ ನಡೆದಿರುವುದಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಸಂಸ್ಥೆಯ ಸೇವೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ನಿಜಕ್ಕೂ ಆಗಿದ್ದೇನು?&lt;/strong&gt;&lt;/h2&gt;&lt;p&gt;ಹೈದರಾಬಾದ್&zwnj;ನಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ಹೊರಟಿದ್ದ ಫ್ಲೈ-91ಏರ್ ಲೈನ್ಸ್ IC3401 (ATRTURBOPROP AT7) ನಿಗದಿಯಂತೆ ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಮುಂಡಗೋಡ, ದಾವಣಗೆರೆ, ಶಿವಮೊಗ್ಗದಲ್ಲಿ ಸುತ್ತಾಡಿ ಬಳಿಕ ಬೆಂಗಳೂರಿಗೆ ತೆರಳಿ 7.30ಕ್ಕೆ ಸುರಕ್ಷಿತವಾಗಿ ಲ್ಯಾಂಡ್&zwnj; ಆಗಿದೆ. ಇದರಿಂದ 2 ಗಂಟೆಗೂ ಹೆಚ್ಚು ಆಕಾಶದಲ್ಲಿ ವಿಮಾಣ ಹಾರಾಡಿದ್ದರಿಂದ ಪ್ರಯಾಣಿಕರು ಭಯಭೀತರಾಗಿ ಕಣ್ಣೀರು ಹಾಕಿದ್ದಾರೆ. ಬಳಿಕ ವಿಮಾನ ಅಲ್ಲಿಂದ ಹುಬ್ಬಳ್ಳಿಗೆ ರಾತ್ರಿ 9ರ ಸುಮಾರಿಗೆ ಆಗಮಿಸಿ ಹೈದರಾಬಾದ್&zwnj;ಗೆ ತೆರಳಿದೆ.&lt;/p&gt;&lt;h3&gt;&lt;strong&gt;ಕಣ್ಣೀರು&lt;/strong&gt;;&lt;strong&gt; ಆತಂಕ&lt;/strong&gt;&lt;/h3&gt;&lt;p&gt;ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡ್&zwnj; ಆಗದೆ ಆಕಾಶದಲ್ಲಿ ಸುತ್ತಿದ ಪರಿಣಾಮ ಪ್ರಯಾಣಿಕರು ಕಣ್ಣೀರು ಹಾಕಿ ತಮ್ಮ ಕುಟುಂಬಸ್ಥರಿಗೆ ವೀಡಿಯೋ ಸಂದೇಶ ಕಳಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್&zwnj; ಆಗಿದ್ದು ಆರಂಭದಲ್ಲಿ ಫ್ಲೈ-91 ವಿಮಾನ ಸಂಸ್ಥೆ ಈ ರೀತಿ ಸೇವೆ ನೀಡಿದರೆ ಮುಂದಿನ ದಿನಗಳಲ್ಲಿ ಏನು ಗತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲ ಪ್ರಯಾಣಿಕರು ಹುಬ್ಬಳ್ಳಿಯಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್&zwnj; ಆಗದಿದ್ದರೆ ಹೈದರಾಬಾದ್&zwnj;ಗೆ ವಾಪಾಸ್&zwnj; ಹೋಗಿ ಎಂದು ಹೇಳಿದ್ದಾರೆ. ಕೆಲವರು ಬೆಳಗಾವಿ ಅಥವಾ ಬೆಂಗಳೂರಿಗೆ ಹೋಗಿ. ವಿಮಾನದಲ್ಲಿ ಯಾವ ಸಮಸ್ಯೆಯಾಗಿದೆ ಎಂದು ಹೇಳಿ ಎಂದು ಸಿಬ್ಬಂದಿಯನ್ನು ಕೇಳುತ್ತಿರುವ ದೃಶ್ಯವೋ ಇದೆ.&lt;/p&gt;&lt;h3&gt;&lt;strong&gt;ಹವಾಮಾನ ವೈಪರೀತ್ಯ&lt;/strong&gt;&lt;/h3&gt;&lt;p&gt;ಈ ನಡುವೆ ಭಾನುವಾರ ರಾತ್ರಿ ನಡೆದ ಘಟನೆ ಕುರಿತಂತೆ ಫ್ಲೈ- 91 ಸಂಸ್ಥೆಯು, ಯಾವುದೇ ಬಗೆಯ ತಾಂತ್ರಿಕ ದೋಷವಾಗಿಲ್ಲ. ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಲ್ಯಾಂಡ್&zwnj; ಮಾಡಲು ಸಾಧ್ಯವಾಗಲಿಲ್ಲ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕಳುಹಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡ್&zwnj; ಮಾಡಲಾಯಿತು. ಅಲ್ಲಿಂದ ಮರಳಿ ಹುಬ್ಬಳ್ಳಿಗೆ ಬಂದು, ಹೈದರಾಬಾದ್&zwnj;ಗೆ ವಿಮಾನವೂ ತನ್ನ ಯಾನ ಮುಂದುವರಿಸಿತು ಎಂದು ಸ್ಪಷ್ಟನೆ ನೀಡಿತು.&lt;/p&gt;&lt;h3&gt;&lt;strong&gt;ಹವಾಮಾನ ವೈಪರೀತ್ಯ ಹೇಗೆ ಸಾಧ್ಯ?&lt;/strong&gt;&lt;/h3&gt;&lt;p&gt;ಈ ನಡುವೆ ಸಂಜೆ 5ರ ವೇಳೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಇಂಡಿಗೋ ವಿಮಾನವೂ ಸುರಕ್ಷಿತವಾಗಿಯೇ ಲ್ಯಾಂಡ್&zwnj; ಆಗಿದೆ. ಅದಕ್ಕೆ ಇಲ್ಲದ ಹವಾಮಾನ ವೈಪರೀತ್ಯ, ಫ್ಲೈ- 91ಕ್ಕೆ ಹೇಗಾಯಿತು ಎಂಬ ಪ್ರಯಾಣಿಕರ ಪ್ರಶ್ನೆಗೆ ಉತ್ತರವಿಲ್ಲ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Dharwad: 16 ವರ್ಷಗಳ ಬಳಿಕ ದೇವಸ್ಥಾನದ ಬಾಗಿಲು ಓಪನ್; ಗುಂಪುಗಳ ಭಿನ್ನಾಭಿಪ್ರಾಯ ಇತ್ಯರ್ಥ&lt;/strong&gt;&lt;/p&gt;&lt;p&gt;ಹವಾಮಾನ ವೈಪರೀತ್ಯದಿಂದಾಗಿ ಫ್ಲೈ-91 ವಿಮಾನ ಭಾನುವಾರ ಸಂಜೆ 4.30ಕ್ಕೆ ಲ್ಯಾಂಡ್&zwnj; ಆಗಿರಲಿಲ್ಲ. ಬೆಂಗಳೂರಿಗೆ ಕಳುಹಿಸಿ ಲ್ಯಾಂಡ್&zwnj; ಮಾಡಿಸಲಾಯಿತು. ಯಾವುದೇ ತಾಂತ್ರಿಕ ದೋಷ ಕಂಡು ಬಂದಿಲ್ಲ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ಡಿಜಿಎಂ (ಎಂಜಿನಿಯರಿಂಗ್&zwnj; ಸಿವಿಲ್&zwnj;) ಪಿ.ಎಂ. ಜಾಧವ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Dharwad: ಶೀಘ್ರದಲ್ಲಿಯೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಬೆಂಗಳೂರಿಗೆ ಸ್ಥಳಾಂತರ?&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;With first Arr from Hyderabad and Dep to Bengaluru, Fly91 has commenced it's flight operations today to/from Hubballi. First flight to Bengaluru with 65 passengers on board is the beginning of it's success story at Hubballi. All the best team.@AAI_Official @AAIRHQSR @aairedsr pic.twitter.com/zcFDxznChd&lt;/p&gt;&lt;p&gt;&mdash; ಹುಬ್ಬಳ್ಳಿ ವಿಮಾನನಿಲ್ದಾಣ: Hubballi Airport (@aaihbxairport) April 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hubballi-airport-how-can-extreme-weather-be-the-only-thing-that-can-happen-to-fly91-airlines-mrq/articleshow-9gt9wey"/>
        </item>
        <item>
            <title><![CDATA[ಯುದ್ಧದ ನಡುವೆಯೂ ದೇಶದಲ್ಲಿ ಪೆಟ್ರೋಲ್‌ ಬಂಕ್‌ ಖಾಲಿಯಾಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ]]></title>
            <link>https://kannada.asianetnews.com/karnataka-districts/india-economic-stability-global-conflicts-pralhad-joshi-gvd/articleshow-cyf0fza</link>
            <guid isPermaLink="true">https://kannada.asianetnews.com/karnataka-districts/india-economic-stability-global-conflicts-pralhad-joshi-gvd/articleshow-cyf0fza</guid>
            <pubDate>Sun, 26 Apr 2026 18:07:00 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯ ಹಾಗೂ ಯುರೋಪ್&zwnj;ನಲ್ಲಿನ ಸಂಘರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಅಸ್ಥಿರತೆ ಇದೆ. ಆದರೂ ಭಾರತ ಗಮನಾರ್ಹ ಸ್ಥಿರತೆ ಪ್ರದರ್ಶಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ke4n1xnvjrzzjtqd1pe35z2a,imgname-----------------------2026-01-04t193146.172-1767535343291.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಏ.26): &lt;/strong&gt;ಮಧ್ಯಪ್ರಾಚ್ಯ ಹಾಗೂ ಯುರೋಪ್&zwnj;ನಲ್ಲಿನ ಸಂಘರ್ಷಗಳಿಂದ ಜಾಗತಿಕ ಮಟ್ಟದಲ್ಲಿ ಅಸ್ಥಿರತೆ ಇದೆ. ಆದರೂ ಭಾರತ ಗಮನಾರ್ಹ ಸ್ಥಿರತೆ ಪ್ರದರ್ಶಿಸುತ್ತಿದೆ. ವಿಕಸಿತ ಭಾರತದತ್ತ ದೃಢ ಹೆಜ್ಜೆಗಳೊಂದಿಗೆ ಸಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಲ್ಲಿನ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಆಯೋಜಿಸಿರುವ ಇನ್&zwnj;ಕಾಮೆಕ್ಸ್&zwnj;-2026 ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;&lt;p&gt;ಜಾಗತಿಕ ಮಟ್ಟದಲ್ಲಿ ಸಾಕಷ್ಟು ಅಸ್ಥಿರತೆ ಇದೆ. ಅತ್ತ ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆಯುತ್ತಿದೆ. ರಷ್ಯಾ ಮತ್ತು ಉಕ್ರೇನ್&zwnj; ಮಧ್ಯೆ ಸಂಘರ್ಷವಿದೆ. ಇವೆಲ್ಲವೂ ಇಂಧನ ಪೂರೈಕೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿಪಡಿಸಿವೆ. ಆದರೂ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್&zwnj; ಪಂಪ್&zwj; ಕೂಡ ಖಾಲಿಯಾಗಿಲ್ಲ. ಇದು ನಮ್ಮ ವ್ಯವಸ್ಥೆಗಳ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಜಾಗತಿಕ ಅಸ್ಥಿರತೆ ಹೊರತಾಗಿಯೂ ದೇಶಾದ್ಯಂತ ನಿರಂತರ ಇಂಧನ ಪೂರೈಕೆಯಾಗುತ್ತಿದೆ ಎಂದರು.&lt;/p&gt;&lt;p&gt;ಭಾರತವು ನಾಲ್ಕು ಟ್ರಿಲಿಯನ್&zwnj; ಆರ್ಥಿಕತೆ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದೆ. ಇದು ಆರ್ಥಿಕ ಸದೃಢತೆಯ ಲಕ್ಷಣ ಎಂದ ಸಚಿವರು, ಉತ್ಪಾದನಾ ಆಧಾರಿತ ಪ್ರೋತ್ಸಾಹಕ ಯೋಜನೆಯ ಯಶಸ್ಸು ಎಂದು ನುಡಿದರು. ಭಾರತವು ಎಲೆಕ್ಟ್ರಾನಿಕ್ಸ್&zwnj;ನ ನಿವ್ವಳ ಆಮದುದಾರ ರಾಷ್ಟ್ರದಿಂದ ಪ್ರಮುಖ ರಫ್ತುದಾರ ರಾಷ್ಟ್ರವಾಗಿ ಪರಿವರ್ತನೆಗೊಂಡಿದೆ ಮತ್ತು ಜಾಗತಿಕ ಮೊಬೈಲ್ ಫೋನ್ ಮಾರುಕಟ್ಟೆಯಲ್ಲಿ ಗಣನೀಯ ಪಾಲು ಹೊಂದಿದೆ ಎಂದ ಅವರು, ಪ್ರಮುಖ ಜಾಗತಿಕ ತಂತ್ರಜ್ಞಾನ ಕಂಪನಿಗಳ ಇತ್ತೀಚಿನ ರಫ್ತುಗಳ ಪೈಕಿ ಹೆಚ್ಚಿನ ಭಾಗವು ಈಗ ಭಾರತದಲ್ಲೇ ತಯಾರಾಗುತ್ತಿದೆ. ರಾಷ್ಟ್ರೀಯ ಒಟ್ಟು ರಫ್ತು 820 ಬಿಲಿಯನ್ ಡಾಲರ್ ದಾಟಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಉಕ ಮೇಲೆ ಗಮನ&lt;/strong&gt;&lt;/h2&gt;&lt;p&gt;ಪ್ರಾದೇಶಿಕ ಬೆಳವಣಿಗೆ ಉತ್ತೇಜಿಸಲು ಪ್ರಮುಖವಾಗಿ ಮೂಲಸೌಕರ್ಯ ಒದಗಿಸಬೇಕು. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಪರಿಷ್ಕೃತ ಪ್ರಸ್ತಾವನೆಯನ್ನು ಪರಿಸರ ಅನುಮತಿಗಾಗಿ ಸಲ್ಲಿಸಲಾಗಿದೆ. ಇದು ಈ ಭಾಗದ ಅಭಿವೃದ್ಧಿಗೆ ಪೂರಕವಾಗಲಿದೆ. ಹೊಸ ಬಂದರು ನಿರ್ಮಾಣ, ಅವುಗಳ ಸಂಪರ್ಕಕ್ಕೆ ದಾರಿ ಮಾಡಿಕೊಡುತ್ತದೆ. ಲಾಜಿಸ್ಟಿಕ್ಸ್ ಸವಾಲುಗಳನ್ನು ಕಡಿಮೆ ಮಾಡುತ್ತದೆ ಎಂದರು. ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳು ಪ್ರಗತಿಯಲ್ಲಿವೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ ಜಾಗತಿಕ ಸ್ಪರ್ಧಾತ್ಮಕತೆಯನ್ನು ಸುಧಾರಿಸಲು 2035ರ ವೇಳೆಗೆ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇ. 12ರಿಂದ ಶೇ. 6ಕ್ಕೆ ಇಳಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/india-economic-stability-global-conflicts-pralhad-joshi-gvd/articleshow-cyf0fza"/>
        </item>
        <item>
            <title><![CDATA[Dharwad: ಶೀಘ್ರದಲ್ಲಿಯೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಬೆಂಗಳೂರಿಗೆ ಸ್ಥಳಾಂತರ?]]></title>
            <link>https://kannada.asianetnews.com/karnataka-districts/dharwad-all-india-radio-regional-center-to-be-shifted-to-bengaluru-soon-mrq/articleshow-ep9rzyy</link>
            <guid isPermaLink="true">https://kannada.asianetnews.com/karnataka-districts/dharwad-all-india-radio-regional-center-to-be-shifted-to-bengaluru-soon-mrq/articleshow-ep9rzyy</guid>
            <pubDate>Sat, 18 Apr 2026 23:12:56 +0530</pubDate>
            <description><![CDATA[ಪ್ರಸಾರ ಭಾರತಿಯು ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರದ ಸುದ್ದಿ ಪ್ರಸಾರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಿದೆ. 1981ರಲ್ಲಿ ಆರಂಭವಾದ ಈ ಕೇಂದ್ರದ ಸ್ಥಳಾಂತರಕ್ಕೆ ಉತ್ತರ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಲಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpgv01zecp657t5vjvacz1cd,imgname-akashavani-dharwad-1776534161390.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಇಲ್ಲಿನ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿನ ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರವೂ ಈ ನಿರ್ಧಾರ ಕೈಗೊಂಡಿದ್ದು, 2026ರ ಮೇ 15ರಿಂದ ಸ್ಥಳಾಂತರವಾಗಲಿದೆ ಎಂದು ತಿಳಿಸಿದೆ. ಇದು ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.&lt;/p&gt;&lt;p&gt;ಧಾರವಾಡ ಕೇಂದ್ರದಲ್ಲಿನ ಕೆಲಸದ ಹೊರೆ ಹೆಚ್ಚಾಗುತ್ತಿರುವುದರಿಂದ ಇಲ್ಲಿನ ನ್ಯೂಸ್&zwnj; ಬುಲೆಟೆನ್&zwnj;ನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಕ್ಷಮ ಪ್ರಾಧಿಕಾರವೂ ತಿಳಿಸಿದೆ. ಈ ಮೂಲಕ ಈ ಕೇಂದ್ರಕ್ಕೆ ಮೊಳೆ ಹೊಡೆಯುವ ಸಿದ್ಧತೆ ಮಾಡಿಕೊಂಡಂತಾಗಿದೆ. 2026ರ ಮೇ 15ರಿಂದಲೇ ಸ್ಥಳಾಂತರವಾಗಲಿದ್ದು, ಬೇಕಾದ ತಯಾರಿ ಮಾಡಿಕೊಳ್ಳಬೇಕು ಎಂದು ಧಾರವಾಡ ಪ್ರಾದೇಶಿಕ ಕೇಂದ್ರಕ್ಕೆ ಸೂಚಿಸಲಾಗಿದೆ. ತಾತ್ಕಾಲಿಕವಾಗಿ ಅಷ್ಟೇ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದೆಯಾದರೂ ಒಮ್ಮೆ ಸ್ಥಳಾಂತರವಾದರೆ ಮತ್ತೆ ಪುನಾರಂಭಗೊಳ್ಳುತ್ತದೆ ಎಂಬ ಗ್ಯಾರಂಟಿ ಏನು ಎಂಬುದು ಆಕಾಶವಾಣಿ ಪ್ರಿಯರ ಪ್ರಶ್ನೆ.&lt;/p&gt;&lt;h2&gt;&lt;strong&gt;ಯಾವಾಗ ಪ್ರಾರಂಭ?&lt;/strong&gt;&lt;/h2&gt;&lt;p&gt;1981ರಲ್ಲಿ ಪ್ರಾರಂಭವಾಗಿದ್ದ ಧಾರವಾಡ ಆಕಾಶವಾಣಿ ಕೇಂದ್ರವೂ (ಪ್ರಸಾರ ಭಾರತಿಯ ಪ್ರಾದೇಶಿಕ ಕೇಂದ್ರ) ಅಲ್ಲಿಂದ ಜನ-ಮನ ಗೆದ್ದಿರುವ ಕೇಂದ್ರವಾಗಿದೆ. 1981ರಲ್ಲಿ ತನ್ನ ಮೊದಲು ನ್ಯೂಸ್&zwnj; ಬ್ಯುಲೆಟೆನ್&zwnj; ಪ್ರಸಾರ ಮಾಡಿತ್ತು. ಕೇಂದ್ರ ಆರಂಭವಾದಾಗಿನಿಂದಲೂ ನ್ಯೂಸ್&zwnj; ಬುಲಿಟೆನ್&zwnj; 10 ನಿಮಿಷ ಅವಧಿ ಹೊಂದಿತ್ತು. ಪ್ರತಿ ದಿನ ಬೆಳಿಗ್ಗೆ 7.05ಕ್ಕೆ ಪ್ರಸಾರವಾಗುತ್ತಿದೆ. ಬೆಳಗಿನ ಸುದ್ದಿಗಳಿಗೆ ಈಗಲೂ ಹೆಚ್ಚಿನ ಕೇಳುಗರು ಇದ್ದಾರೆ ಎಂಬುದು ಆಡಿಯನ್ಸ್&zwnj; ರಿಸರ್ಚ್&zwnj; ಯುನಿಟ್&zwnj; ನಡೆಸಿದ ಸಮೀಕ್ಷೆ ತಿಳಿಸುತ್ತದೆ. ಪ್ರತಿ ಸೋಮವಾರ ಸಂಜೆ 6.30ರಿಂದ 5 ನಿಮಿಷ ಜಿಲ್ಲಾ ಸುದ್ದಿ ಪತ್ರ ಪ್ರಸಾರ ಮಾಡುತ್ತದೆ. ಧಾರವಾಡ, ಬೆಳಗಾವಿ, ಕೊಪ್ಪಳ, ಉತ್ತರ ಕನ್ನಡ, ಹಾವೇರಿ, ರಾಯಚೂರು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಬಳ್ಳಾರಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೇಲೆ ಬುಲಿಟೆನ್&zwnj; ಮಾಡಲಾಗುತ್ತಿದೆ. ಆಯಾ ಜಿಲ್ಲೆಗಳ ಅರೆಕಾಲಿಕ ವರದಿಗಾರರು ವರದಿ ತಯಾರಿಸಿ ಮೇಲ್&zwnj; ಮಾಡುತ್ತಾರೆ.&lt;/p&gt;&lt;p&gt;6 ನಿಮಿಷಗಳ (ಈ ಹಿಂದೆ 20 ನಿಮಿಷ ಇತ್ತು) ವ್ಯೂಸ್ ರೀಲ್ ಸಮಾಚಾರ ದರ್ಶನವು ಸಾಪ್ತಾಹಿಕ ಸುದ್ದಿ ನಿಯತಕಾಲಿಕೆಯಂತೆ ಪ್ರಸಾರ ವಾಗುತ್ತದೆ. ಈ ಕಾರ್ಯಕ್ರಮವನ್ನು ಧಾರವಾಡದ ಆಕಾಶವಾಣಿಯಿಂದ ಪ್ರತಿ ಶನಿವಾರ ಸಂಜೆ 6.20ಕ್ಕೆ ಪ್ರಸಾರ ಮಾಡುತ್ತದೆ. ಧಾರವಾಡದ ಕೇಂದ್ರವು ಪ್ರತಿದಿನ ಬೆಳಗ್ಗೆ 8.30, 9.30, 10.30, ಮತ್ತು ರಾತ್ರಿ 8.30ಕ್ಕೆ 2.50 ನಿಮಿಷ ಐದು ಎಫ್&zwnj;ಎಂ ಬುಲೆಟಿನ್ ಕೂಡ ಪ್ರಸಾರವಾಗುತ್ತವೆ. ನಿತ್ಯದ ಸ್ಥಳೀಯ ಸುದ್ದಿ ಮತ್ತು ಘಟನೆ ಒಳಗೊಂಡಿರುತ್ತವೆ. ಜತೆಗೆ ರಾಜ್ಯ/ರಾಷ್ಟ್ರ ಮಟ್ಟದ ಪ್ರಮುಖ ಘಟನಾವಳಿಗಳು ಇದರಲ್ಲಿ ಅಡಕವಾಗಿರುತ್ತಿದ್ದವು. ಆದರೆ, ಇದೀಗ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವೂ ಸ್ಥಳಾಂತರವಾಗುತ್ತಿದೆ. ಇವೆಲ್ಲವೂ ಇನ್ಮುಂದೆ ಬೆಂಗಳೂರು ಕೇಂದ್ರದಿಂದಲೇ ಪ್ರಸಾರವಾಗಲಿವೆ ಎಂದು ತಿಳಿಸಲಾಗುತ್ತಿದೆ. ಆದರೆ ಸ್ಥಳಾಂತರಗೊಂಡ ಬಳಿಕ ಈ ಬುಲೆಟೆನ್&zwnj;ಗಳಿಗೆ ಎಷ್ಟು ಪ್ರಾಮುಖ್ಯತೆ ದೊರೆಯುತ್ತದೆ ಎಂಬುದು ಪ್ರಶ್ನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಸು/ಎಮ್ಮೆ ಆಕಸ್ಮಿಕವಾಗಿ ಮರಣ ಹೊಂದಿದಾಗ ರೈತರಿಗೆ ಆರ್ಥಿಕ ಭದ್ರತೆ ನೀಡುವ ಯೋಜನೆಗೆ ಚಾಲನೆ&lt;/strong&gt;&lt;/p&gt;&lt;h3&gt;&lt;strong&gt;ಆಕಾಶವಾಣಿ ಕೇಂದ್ರದ ಪ್ರಿಯರಲ್ಲಿ ಬೇಸರ&lt;/strong&gt;&lt;/h3&gt;&lt;p&gt;ಧಾರವಾಡ ಆಕಾಶವಾಣಿ ಕೇಂದ್ರಕ್ಕೆ ತನ್ನದೇ ಆದ ಛಾಪು, ಜನ ಬೆಂಬಲ ಇತ್ತು. ಇದೀಗ ಅದೇ ಇಲ್ಲಿಂದ ಸ್ಥಳಾಂತರವಾಗುತ್ತಿರುವುದು ಆಕಾಶವಾಣಿ ಕೇಂದ್ರದ ಪ್ರಿಯರಲ್ಲಿ ಬೇಸರವನ್ನುಂಟು ಮಾಡಿದೆ. ಯಾವುದೇ ಕಾರಣಕ್ಕೂ ಇಲ್ಲಿಂದ ನ್ಯೂಸ್&zwnj; ಬುಲೆಟಿನ್&zwnj; ಹೆಸರಲ್ಲಿ ಸ್ಥಳಾಂತರ ಮಾಡುತ್ತಿರುವುದನ್ನು ಕೈ ಬಿಡಬೇಕು. ವರ್ಕ್&zwnj; ಲೋಡ್&zwnj; ಜಾಸ್ತಿಯಾದರೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹ ಕೇಳಿ ಬಂದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೂಗಿನೊಳಗೆ ಸಿಲುಕಿದ ಯುವತಿ ಮೂಗುತಿ; ಅಗ್ನಿಶಾಮಕದಳದ ಸಿಬ್ಬಂದಿಯಿಂದ ಯಶಸ್ವಿ ಆಪರೇಷನ್!&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dharwad-all-india-radio-regional-center-to-be-shifted-to-bengaluru-soon-mrq/articleshow-ep9rzyy"/>
        </item>
        <item>
            <title><![CDATA[ಯೋಗೇಶ್ ಗೌಡ ಕೊಲೆ ಪ್ರಕರಣ: ಜನಪ್ರತಿನಿಧಿ ಕೋರ್ಟ್ ತೀರ್ಪು, ವಿನಯ್ ಕುಲಕರ್ಣಿಗೆ ಜೀವಾವಧಿ ಎನ್ನುತ್ತಿದ್ದಂತೆ ಗಳಗಳನೆ ಅತ್ತ ಶಾಸಕ]]></title>
            <link>https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf</link>
            <guid isPermaLink="true">https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf</guid>
            <pubDate>Sat, 18 Apr 2026 05:35:31 +0530</pubDate>
            <description><![CDATA[&lt;p&gt;ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಓರ್ವ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp8mhxkyn1ggn98rsk20f2vw,imgname-vinay-kulkarni-convicted-1776258971261.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.18):&lt;/strong&gt; ಹತ್ತು ವರ್ಷಗಳ ಹಿಂದೆ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 17 ಮಂದಿ ಅಪರಾಧಿಗಳಿಗೆ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್&zwnj; ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಒಬ್ಬ ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.&lt;/p&gt;&lt;p&gt;ಪ್ರಕರಣದ 21 ಮಂದಿ ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿ ಎಂದು ತೀರ್ಮಾನಿಸಿ ಏ.15ರಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್&zwnj;, ಶುಕ್ರವಾರ ತೆರೆದ ನ್ಯಾಯಾಲಯದಲ್ಲಿ 17 ಮಂದಿ ಅಪರಾಧಿಗಳಿಗೂ ಶಿಕ್ಷೆ ಪ್ರಮಾಣ ಪ್ರಕಟಿಸಿದರು.&lt;/p&gt;&lt;p&gt;ಶಿಕ್ಷೆ ಪ್ರಮಾಣ ಪ್ರಕಟವಾಗುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ಬೆಳಗ್ಗೆ ಬಿಗಿ ಭದ್ರತೆಯಲ್ಲಿ 17 ಮಂದಿ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆತಂದಿದ್ದರು. ಸಂಜೆ ಸುಮಾರು 4.10ಕ್ಕೆ ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ನ್ಯಾಯಾಲಯದ ಕೊಠಡಿ ಪ್ರವೇಶಿಸಿದರು. ಬಳಿಕ 17 ಮಂದಿ ಅಪರಾಧಿಗಳ ಹೆಸರು ಕೂಗಿದರು. ಈ ವೇಳೆ ವಿನಯ್&zwnj; ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ನ್ಯಾಯಾಧೀಶರಿಗೆ ಕೈ ಮುಗಿದು ನಿಂತರು. ಈ ವೇಳೆ ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಜೀವಾವಧಿ ಶಿಕ್ಷೆ ಎಂದು ಹೇಳುತ್ತಿದಂತೆ ವಿನಯ್&zwnj; ಕುಲಕರ್ಣಿ ಸೇರಿ ಎಲ್ಲ ಆರೋಪಿಗಳು ಕಣ್ಣೀರಿಟ್ಟರು.&lt;/p&gt;&lt;p&gt;ನ್ಯಾಯಾಲಯದ ತೀರ್ಪಿನ ಬಳಿಕ ಅಪರಾಧಿಗಳನ್ನು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.&lt;/p&gt;&lt;h2&gt;ಯಾವುದಕ್ಕೆ ಎಷ್ಟು ಶಿಕ್ಷೆ?:&lt;/h2&gt;&lt;p&gt;ಭಾರತೀಯ ದಂಡ&zwnj; ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಜತೆಗೆ 120ಬಿ (ಪಿತೂರಿ) ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಗಳಿಗಾಗಿ ವಿಕ್ರಮ್ ಬಳ್ಳಾರಿ (ಎ2), ಕೀರ್ತಿಕುಮಾರ್ ಬಸವರಾಜ ಕುರಹಟ್ಟಿ (ಎ3), ಸಂದೀಪ್ ಸವದತ್ತಿ (ಎ4), ವಿನಾಯಕ ಕಟಗಿ (ಎ5), ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ (ಎ6), ಸಂತೋಷ್ ಸವದತ್ತಿ (ಎ7), ಎಂ. ದಿನೇಶ್ (ಎ8), ಅಶ್ವತ್ (ಎ9), ಸುನೀಲ್ (ಎ10), ನಜೀರ್ ಅಹಮದ್ (ಎ11), ಶಹನವಾಜ್ (ಎ12), ನೂತನ್ (ಎ13), ಹರ್ಷಿತ್ (ಎ14), ವಿನಯ ಕುಲಕರ್ಣಿ (ಎ15), ಚಂದ್ರಶೇಖರ್ ಇಂಡಿ (ಎ16) ಹಾಗೂ ವಿಕಾಸ್ ಕಲ್ಬುರ್ಗಿಗೆ (ಎ18) ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 30 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;p&gt;ಅಂತೆಯೇ ಐಪಿಸಿ ಸೆಕ್ಷನ್ 143 (ಅಕ್ರಮ ಕೂಟ) ಜತೆಗೆ 120ಬಿ (ಪಿತೂರಿ) ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕಾಗಿ 2 ರಿಂದ 14 ಹಾಗೂ 18ನೇ ಆರೋಪಿಗಳಿಗೆ ತಲಾ 2 ಸಾವಿರ ರು. ದಂಡದೊಂದಿಗೆ 6 ತಿಂಗಳ ಅವಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಐಪಿಸಿ ಸೆಕ್ಷನ್ 147 (ಗಲಭೆ) ಜತೆಗೆ 120ಬಿ ಅಡಿಯ ಅಪರಾಧಕ್ಕಾಗಿ ಆರೋಪಿ ಸಂಖ್ಯೆ 2 ರಿಂದ 14 ಹಾಗೂ 18ನೇ ಆರೋಪಿಗೆ ತಲಾ 2 ಸಾವಿರ ರು. ದಂಡದೊಂದಿಗೆ 1 ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ.&lt;/p&gt;&lt;p&gt;ಐಪಿಸಿ ಸೆಕ್ಷನ್ 148 (ಮಾರಕಾಸ್ತ್ರ ಹಿಡಿದು ಗಲಭೆ) ಜತೆಗೆ 120ಬಿ ಅಡಿಯಲ್ಲಿನ ಅಪರಾಧ ಕೃತ್ಯಕ್ಕಾಗಿ 2 ರಿಂದ 14 ಮತ್ತು 18ನೇ ಆರೋಪಿಗಳಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 2 ಸಾವಿರ ರು. ದಂಡ ವಿಧಿಸಲಾಗಿದೆ. ಐಪಿಸಿ ಸೆಕ್ಷನ್ 120ಬಿ (ಪಿತೂರಿ) ಅಡಿಯಲ್ಲಿನ ಅಪರಾಧಕ್ಕಾಗಿ 2 ರಿಂದ 16 ಹಾಗೂ 18ನೇ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 30 ಸಾವಿರ ರು. ದಂಡ ವಿಧಿಸಲಾಗಿದೆ.&lt;/p&gt;&lt;p&gt;ಚನ್ನಕೇಶವ ಟಿಂಗರೀಕರ್&zwnj;ಗೆ (ಎ19) ಐಪಿಸಿ ಸೆಕ್ಷನ್ 218 (ಸರ್ಕಾರಿ ಅಧಿಕಾರಿಯು ವ್ಯಕ್ತಿಯನ್ನು ಶಿಕ್ಷೆಯಿಂದ ಅಥವಾ ಆಸ್ತಿ ಮುಟ್ಟುಗೋಲಿನಿಂದ ರಕ್ಷಿಸಲು ಸುಳ್ಳು ದಾಖಲೆ ಸೃಷ್ಟಿ) ಅಡಿ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರು. ದಂಡ, ಐಪಿಸಿ ಸೆಕ್ಷನ್ 201 (ಸಾಕ್ಷ್ಯಗಳ ಕಣ್ಮರೆಗೆ ಕಾರಣ ಅಥವಾ ಅಪರಾಧಿ ರಕ್ಷಿಸಲು ಸುಳ್ಳು ಮಾಹಿತಿ ನೀಡುವುದು) ಜತೆಗೆ 120ಬಿ ಅಡಿಯಲ್ಲಿನ ಅಪರಾಧಕ್ಕಾಗಿ, 2 ರಿಂದ 16, 18 ಮತ್ತು 19ನೇ ಆರೋಪಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರು. ದಂಡ ವಿಧಿಸಿದೆ.&lt;/p&gt;&lt;p&gt;ಐಪಿಸಿ ಸೆಕ್ಷನ್ 218 ಜತೆಗೆ 120ಬಿ ಅಡಿಯಲ್ಲಿನ ಅಪರಾಧಕ್ಕಾಗಿ ಎ19 ಚೆನ್ನಕೇಶವ ಟಿಂಗರೀಕರ್&zwnj;ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರು. ದಂಡ ವಿಧಿಸಲಾಗಿದೆ. ಮೇಲಿನ ಎಲ್ಲ ಪ್ರಕರಣಗಳಲ್ಲೂ ಅಪರಾಧಿಗಳು ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.&lt;/p&gt;&lt;h3&gt;ಯೋಗೇಶ್&zwnj; ಗೌಡ ಮಕ್ಕಳಿಗೆ 16 ಲಕ್ಷ ರು. ಪರಿಹಾರ:&lt;/h3&gt;&lt;p&gt;ಅಪರಾಧಿಗಳು ದಂಡ ಪಾವತಿಸಲು ವಿಫಲವಾಗಿ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಿದರೂ ದಂಡ ಪಾವತಿಸುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿಗಳಿಗೆ ವಿಧಿಸಲಾಗಿರುವ ಎಲ್ಲ ಶಿಕ್ಷೆಗಳೂ ಏಕಕಾಲದಲ್ಲಿ ಜಾರಿಯಾಗಲಿವೆ. ವಿಚಾರಣಾಧೀನ ಕೈದಿಗಳಾಗಿ ಅನುಭವಿಸಿದ ಬಂಧನದ ಅವಧಿ ಜೈಲು ಶಿಕ್ಷೆಯಿಂದ ಕಡಿತಗೊಳ್ಳಲಿದೆ. ದಂಡದ ಒಟ್ಟು ಮೊತ್ತದಿಂದ ಮೃತ ಯೋಗೇಶ್ ಗೌಡ ಮತ್ತು ಗುರುನಾಥ ಗೌಡ ಅವರ ಮಕ್ಕಳಿಗೆ 16 ಲಕ್ಷ ರು. ಪರಿಹಾರ ನೀಡಬೇಕು. ಉಳಿದ ದಂಡದ ಮೊತ್ತವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;&lt;strong&gt;ಏನಿದು ಪ್ರಕರಣ?:&lt;/strong&gt;&lt;/p&gt;&lt;p&gt;ಧಾರವಾಡದ ಜಿ.ಪಂ. ಮಾಜಿ ಸದಸ್ಯ ಯೋಗೇಶ್&zwnj; ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಈ ಪ್ರಕರಣವನ್ನು 2019ರಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಿದ ಸಿಬಿಐ ಅಧಿಕಾರಿಗಳು 2020ರ ನ.5ರಂದು ವಿನಯ್&zwnj; ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್&zwnj; ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.&lt;/p&gt;&lt;p&gt;&lt;strong&gt;ಖುಲಾಸೆ ಗೊಂಡವರು ಯಾರು?&lt;/strong&gt;&lt;/p&gt;&lt;p&gt;ಪ್ರಕರಣದ 20ನೇ ಆರೋಪಿ ವಾಸುದೇವ ರಾಮ ನಿಲೇಕಣಿ, 21 ಆರೋಪಿ ಸೋಮಶೇಖರ್ ಬಸಪ್ಪ ನ್ಯಾಮನಗೌಡ, ಮಾಫಿ ಸಾಕ್ಷಿಯಾಗಿದ್ದ 1ನೇ ಆರೋಪಿ ಬಸವರಾಜ ಮುತ್ತಗಿ, 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್.&lt;/p&gt;&lt;p&gt;&lt;strong&gt;17ನೇ ಆರೋಪಿ ವಿರುದ್ಧ ಕ್ರಮಕ್ಕೆ ಅವಕಾಶ&lt;/strong&gt;&lt;/p&gt;&lt;p&gt;ಈ ಪ್ರಕರಣದಲ್ಲಿ ಮೊದಲಿಗೆ ಮಾಫಿ ಸಾಕ್ಷಿಯಾಗಿ ನಂತರ ವಿಚಾರಣಾ ನ್ಯಾಯಾಲಯದ ಎದುರು ಪ್ರತಿಕೂಲ ಸಾಕ್ಷ್ಯ ನುಡಿದಿದ್ದ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರ್&zwnj; ವಿರುದ್ಧ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.&lt;/p&gt;&lt;p&gt;&lt;strong&gt;ಸುಳ್ಳು ಸಾಕ್ಷ್ಯ ಪ್ರಕರಣ ದಾಖಲಿಸಲು ನಿರ್ದೇಶನ&lt;/strong&gt;&lt;/p&gt;&lt;p&gt;ವಿಚಾರಣಾ ನ್ಯಾಯಾಲಯದ ಮುಂದೆ ಸುಳ್ಳು ಸಾಕ್ಷ್ಯ ನೀಡಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ, ಶಂಕರಗೌಡ ಬಸನಗೌಡ ಪಾಟೀಲ್ ಹಾಗೂ ಇತರ ಸ್ವತಂತ್ರ ಸಾಕ್ಷಿಗಳಾದ ದತ್ತಾತ್ರೇಯ ಗುಡಗಂಟಿ, ಆನಂದ ಈರಪ್ಪ ಉದ್ದಣ್ಣವರ್&zwnj;, ವಿನಾಯಕ ಬಿಂಜಿಯವರ್&zwnj;, ಮೋಹನ್&zwnj; ಈಚರಪ್ಪ ಮಲ್ಮುತ್ತಲ್, ವಿವೇಕಾನಂದ ದಳವಾಯಿ, ನಟರಾಜ್&zwnj; ಸರದೇಸಾಯಿ ಮತ್ತು ವಿಜಯ್&zwnj; ಕುಲಕರ್ಣಿ ವಿರುದ್ಧ ಸುಳ್ಳು ಸಾಕ್ಷ್ಯದ ಪ್ರಕರಣವನ್ನು ದಾಖಲಿಸಲು ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್&zwnj;ಗೆ ನ್ಯಾಯಾಲಯ ನಿರ್ದೇಶಿಸಿದೆ.&lt;/p&gt;&lt;p&gt;&lt;strong&gt;ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಕುಲಕರ್ಣಿ&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್&zwnj; ಅವರು ತೆರೆದ ನ್ಯಾಯಾಲಯದಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸುವಾಗ ಕಟಕಟೆ ಎದುರು 17 ಮಂದಿ ಅಪರಾಧಿಗಳು ತಲೆ ಬಗ್ಗಿಸಿ ಮೌನವಾಗಿ ನಿಂತಿದ್ದರು. ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಹೇಳುತ್ತಿದ್ದಂತೆ ಅಪರಾಧಿ ವಿನಯ್&zwnj; ಕುಲಕರ್ಣಿ ಭಾವೋದ್ವೇಗಕ್ಕೆ ಒಳಗಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು. ಉಳಿದ 16 ಮಂದಿ ಆರೋಪಿಗಳು ಭಾವುಕರಾಗಿ ಕಣ್ಣೀರು ಸುರಿಸಿದರು.&lt;/p&gt;&lt;p&gt;&lt;strong&gt;ಹೈಕೋರ್ಟ್&zwnj;ನಲ್ಲಿ ಮೇಲ್ಮನವಿಗೆ ಅವಕಾಶ&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್&zwnj; ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಈ ಪ್ರಕರಣದಲ್ಲಿ ಅಪರಾಧಿ ವಿನಯ್&zwnj; ಕುಲಕರ್ಣಿ ಜನಪ್ರತಿನಿಧಿ ಆಗಿರುವುದರಿಂದ ಜನಪ್ರತಿನಿಧಿಗಳ ಹೈಕೋರ್ಟ್&zwnj; ವಿಭಾಗೀಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಲಿದೆ.&lt;/p&gt;&lt;p&gt;&lt;strong&gt;ಶಿಕ್ಷೆ ಅಮಾನತು, ಬೇಲ್&zwnj; ಹೈಕೋರ್ಟ್&zwnj; ವಿವೇಚನೆಗೆ:&lt;/strong&gt;&lt;/p&gt;&lt;p&gt;ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಈ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ತಮಗೆ ಜಾಮೀನು ನೀಡುವಂತೆ ಅಪರಾಧಿಗಳು ಹೈಕೋರ್ಟ್&zwnj;ಗೆ ಮೇಲ್ಮನವಿ ಸಲ್ಲಿಸಬಹುದು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೂ ಅವಕಾಶವಿದೆ. ಅಂತಿಮವಾಗಿ ಶಿಕ್ಷೆ ಅಮಾನತುಗೊಳಿಸುವ ಮತ್ತು ಜಾಮೀನು ಮಂಜೂರು ಮಾಡುವುದು ಹೈಕೋರ್ಟ್&zwnj; ವಿವೇಚನೆಗೆ ಒಳಪಟ್ಟಿರುತ್ತದೆ.&lt;/p&gt;&lt;p&gt;&lt;strong&gt;ಬೇರೆ ಬಟ್ಟೆ ಧರಿಸಲು ಅವಕಾಶಕ್ಕೆ ಮನವಿ&lt;/strong&gt;&lt;/p&gt;&lt;p&gt;ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ ಬಳಿಕ ಅಪರಾಧಿ ವಿನಯ್&zwnj; ಕುಲಕರ್ಣಿ ಪರ ವಕೀಲರು, ಅಪರಾಧಿಗಳು ಕಳೆದ ಮೂರು ದಿನಗಳಿಂದ ಒಂದೇ ಬಟ್ಟೆಯಲ್ಲಿದ್ದಾರೆ. ಹೀಗಾಗಿ ಬೇರೆ ಬಟ್ಟೆ ಧರಿಸಲು ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಜೈಲು ಮ್ಯಾನುವೆಲ್&zwnj;ನಲ್ಲಿ ಇರುವ ಅವಕಾಶದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.&lt;/p&gt;&lt;p&gt;&lt;strong&gt;ಇತ್ತೀಚಿನ 2ನೇ ಮಹತ್ವದ ತೀರ್ಪು:&lt;/strong&gt;&lt;/p&gt;&lt;p&gt;ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್&zwnj; ಗಜಾನನ ಭಟ್&zwnj; ಅವರು ಇತ್ತೀಚೆಗೆ ನೀಡಿದ ಎರಡನೇ ಮಹತ್ವದ ತೀರ್ಪು ಇದಾಗಿದೆ. ಅತ್ಯಾ೧ಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್&zwnj; ರೇವಣ್ಣ ಅವರಿಗೆ ಜೀವಿತಾವಧಿ ಜೈಲು ಶಿಕ್ಷೆ ನೀಡಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಹಾಲಿ ಶಾಸಕ ವಿನಯ್&zwnj; ಕುಲಕರ್ಣಿ ಸೇರಿ 16 ಮದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದ್ದಾರೆ.&lt;/p&gt;&lt;p&gt;&lt;strong&gt;ಸನ್ನಡತೆ ಮೇಲೆ ಬಿಡುಗಡೆಗೆ ಅವಕಾಶ:&lt;/strong&gt;&lt;/p&gt;&lt;p&gt;ಘೋರ ಅಪರಾಧ ಪ್ರಕರಣಗಳಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ ಜೀವ ಇರುವವರೆಗೂ ಜೈಲು ಶಿಕ್ಷೆ ಅನುಭವಿಸಬೇಕು. ಇದರಲ್ಲಿ ಅಪರಾಧಿಗೆ ಶಿಕ್ಷೆ ಕಡಿಮೆ ಮಾಡುವ ಅಥವಾ ಕ್ಷಮಾಧಾನಕ್ಕೆ ಅವಕಾಶವೇ ಇಲ್ಲ. ಆದರೆ, ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ 14 ವರ್ಷಗಳ ಶಿಕ್ಷೆ ಅನುಭವಿಸಿದ ಬಳಿಕ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಅವಕಾಶವಿದೆ. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 16 ಮಂದಿ ಅಪರಾಧಿಗಳೂ ಸನ್ನಡತೆ ವ್ಯಾಪ್ತಿಗೆ ಬರುತ್ತಾರೆ.&lt;/p&gt;&lt;p&gt;&lt;strong&gt;ಶಾಸಕ ಸ್ಥಾನದಿಂದ ಅನರ್ಹತೆ ನಿಶ್ಚಿತ:&lt;/strong&gt;&lt;/p&gt;&lt;p&gt;ಯಾವುದೇ ಶಾಸಕ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದರೆ ತಕ್ಷಣ ಆತನ ಶಾಸಕನ ಸ್ಥಾನ ರದ್ದಾಗುತ್ತದೆ. ಇದೀಗ ಕಾಂಗ್ರೆಸ್&zwnj; ಶಾಸಕ ವಿನಯ್&zwnj; ಕುಲಕರ್ಣಿ ಜೀವಾಧಿಗೆ ಶಿಕ್ಷೆಗೆ ಗುರಿಯಾಗಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿದ್ದಾರೆ. ನ್ಯಾಯಾಲಯದ ತೀರ್ಪು ಪ್ರತಿ ವಿಧಾನಸಭಾ ಸ್ಪೀಕರ್&zwnj;ಗೆ ತಲುಪಿದ ತಕ್ಷಣ ಸ್ಪೀಕರ್&zwnj; ಅವರು ಶಾಸಕ ಸ್ಥಾನ ಅನರ್ಹ ಸಂಬಂಧ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;p&gt;&lt;strong&gt;ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು?&lt;/strong&gt;&lt;/p&gt;&lt;p&gt;ವಿನಯ್&zwnj; ಕುಲಕರ್ಣಿ ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಕೋರಬಹುದು ಅಥವಾ ದೋಷಿ ಎಂಬ ತೀರ್ಪಿಗೆ ತಡೆಯಾಜ್ಞೆ ಕೋರಬಹುದು. ಒಂದು ವೇಳೆ ಹೈಕೋರ್ಟ್&zwnj; ತಡೆಯಾಜ್ಞೆ ನೀಡಿದರೆ ಶಾಸಕ ಸ್ಥಾನ ಉಳಿಯಲಿದೆ. ಇಲ್ಲವಾದರೆ, ಜೈಲುವಾಸದ ಜೊತೆಗೆ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ. ಮುಂದೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲು ಕಾನೂನಿನಲ್ಲಿ ಅವಕಾಶವಿದೆ.&lt;/p&gt;&lt;p&gt;&lt;strong&gt;ಮುಂದೇನು?&lt;/strong&gt;&lt;/p&gt;&lt;ul&gt; &lt;li&gt;ಶಿಕ್ಷೆ ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್&zwnj;ನಲ್ಲಿ ಮೇಲ್ಮನವಿ ಸಲ್ಲಿಸಬಹುದು&lt;/li&gt; &lt;li&gt;ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಜಾಮೀನು ನೀಡುವಂತೆ ಕೋರಬಹುದು&lt;/li&gt; &lt;li&gt;ಪ್ರಕರಣದ ತನಿಖಾಧಿಕಾರಿಗಳೂ ಇದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಬಹುದು&lt;/li&gt; &lt;li&gt;ಶಿಕ್ಷೆ ಅಮಾನತು, ಜಾಮೀನು ಮಂಜೂರು ಹೈಕೋರ್ಟ್&zwnj; ವಿವೇಚನೆಗೆ&lt;/li&gt; &lt;li&gt;ಶಿಕ್ಷೆಗೆ ಹೈಕೋರ್ಟ್&zwnj; ತಡೆಯಾಜ್ಞೆ ನೀಡಿದರೆ ವಿನಯ್&zwnj; ಶಾಸಕತ್ವ ಸುರಕ್ಷಿತ&lt;/li&gt;&lt;/ul&gt;&lt;p&gt;&lt;strong&gt;ಶಾಸಕ ಸ್ಥಾನದಿಂದ ಶೀಘ್ರವೇ ಅನರ್ಹ&lt;/strong&gt;&lt;/p&gt;&lt;p&gt;ಯಾವುದೇ ಶಾಸಕ ಎರಡು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾದರೆ ತಕ್ಷಣ ಆತನ ಶಾಸಕನ ಸ್ಥಾನ ರದ್ದಾಗುತ್ತದೆ. ನ್ಯಾಯಾಲಯದ ತೀರ್ಪು ಪ್ರತಿ ವಿಧಾನಸಭಾ ಸ್ಪೀಕರ್&zwnj;ಗೆ ತಲುಪಿದ ತಕ್ಷಣ ಸ್ಪೀಕರ್&zwnj; ಅವರು ವಿನಯ್&zwnj; ಕುಲಕರ್ಣಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-congress-mla-vinay-kulkarni-gets-life-imprisonment-in-yogesh-gowda-murder-case-rav/articleshow-g9ohrzf"/>
        </item>
        <item>
            <title><![CDATA[ಹುಬ್ಬಳ್ಳಿಯಿಂದ ನ್ಯೂ ಟಿನ್ಸುಕಿಯಾ ನಡುವೆ ವಿಶೇಷ ರೈಲು, ಈಶಾನ್ಯ ಭಾರತ ಭೇಟಿ ಈಗ ಸುಲಭ, ಎಲ್ಲೆಲ್ಲಿ ನಿಲುಗಡೆ?]]></title>
            <link>https://kannada.asianetnews.com/state/south-western-railway-summer-special-train-between-hubballi-and-new-tinsukia-announced-to-manage-holiday-rush-gdp/articleshow-gck1k9g</link>
            <guid isPermaLink="true">https://kannada.asianetnews.com/state/south-western-railway-summer-special-train-between-hubballi-and-new-tinsukia-announced-to-manage-holiday-rush-gdp/articleshow-gck1k9g</guid>
            <pubDate>Mon, 20 Apr 2026 17:44:27 +0530</pubDate>
            <description><![CDATA[ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈರುತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ವಿಶೇಷ ರೈಲು (07325/07326) ಸೇವೆಯನ್ನು ಘೋಷಿಸಿದೆ. ಈ ರೈಲು ಕರ್ನಾಟಕದಿಂದ ಈಶಾನ್ಯ ಭಾರತಕ್ಕೆ ಪ್ರಯಾಣಿಸುವವರಿಗೆ ಅನುಕೂಲ ಕಲ್ಪಿಸಲಿದ್ದು, ಏಪ್ರಿಲ್ 2026 ರಲ್ಲಿ ಸಂಚರಿಸಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kddtprbp4cvn9jmymxwwajx6,imgname-railway-1766769516918.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ನಿಯಂತ್ರಿಸಲು ನೈರುತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದ್ದು, ಹುಬ್ಬಳ್ಳಿ ಮತ್ತು ನ್ಯೂ ಟಿನ್ಸುಕಿಯಾ ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಿದೆ.&lt;/p&gt;&lt;h2&gt;ರೈಲು ವೇಳಾಪಟ್ಟಿ&lt;/h2&gt;&lt;p&gt;ರೈಲು ಸಂಖ್ಯೆ 07325 ಏಪ್ರಿಲ್ 23, 2026 (ಗುರುವಾರ) ರಂದು ಬೆಳಗ್ಗೆ 11:45ಕ್ಕೆ ಹುಬ್ಬಳ್ಳಿಯಿಂದ ಹೊರಟು, ಭಾನುವಾರ ಮಧ್ಯಾಹ್ನ 2:30ಕ್ಕೆ ನ್ಯೂ ಟಿನ್ಸುಕಿಯಾ ತಲುಪಲಿದೆ.&lt;/p&gt;&lt;p&gt;ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 07326 ಏಪ್ರಿಲ್ 27, 2026 (ಸೋಮವಾರ) ರಂದು ರಾತ್ರಿ 10:00ಕ್ಕೆ ನ್ಯೂ ಟಿನ್ಸುಕಿಯಾದಿಂದ ಹೊರಟು, ಗುರುವಾರ ರಾತ್ರಿ 11:00ಕ್ಕೆ ಹುಬ್ಬಳ್ಳಿ ತಲುಪಲಿದೆ.&lt;/p&gt;&lt;h2&gt;ಮಾರ್ಗ ಮತ್ತು ನಿಲ್ದಾಣಗಳು&lt;/h2&gt;&lt;p&gt;ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಅವುಗಳಲ್ಲಿ:&lt;/p&gt;&lt;p&gt;ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಬಂಗಾರಪೇಟೆ, ಕುಪ್ಪಂ, ಜೋಲಾರಪೇಟೆ, ಕಟ್ಪಾಡಿ, ರೇಣಿಗುಂಟ, ಗುಡೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಾಲಸಾ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ್, ಕಟಕ್, ಭದ್ರಕ್, ಖರಗ್ಪುರ್, ಆಂಡುಲ್, ದನಕುಣಿ, ಬರ್ದ್ಧಮಾನ್, ಬೋಲ್ಪುರ್ (ಶಾಂತಿನಿಕೇತನ), ರಾಂಪುರ್ ಹಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಬರ್ಸೋಯಿ, ಕಿಶನ್ಗಂಜ್, ನ್ಯೂ ಜಲ್ಪೈಗುರಿ, ನ್ಯೂ ಕೂಚ್ ಬೆಹಾರ್, ನ್ಯೂ ಅಲಿಪುರ ದ್ವಾರ, ಕೊಕ್ರಜಾರ್, ನ್ಯೂ ಬೊಂಗೈಗಾಂವ್, ಬರ್ಪೆಟಾ ರೋಡ್, ರಂಗಿಯಾ, ನ್ಯೂ ಮಿಸ್ಮಾರಿ, ರಂಗಾಪರ ನಾರ್ತ್, ವಿಶ್ವನಾಥ್ ಚರಾಲಿ, ಹರ್ಮುಟಿ, ನಾರ್ತ್ ಲಖಿಂಪುರ ಮತ್ತು ಧೇಮಾಜಿ.&lt;/p&gt;&lt;h2&gt;ಬೋಗಿಗಳ ವಿನ್ಯಾಸ&lt;/h2&gt;&lt;p&gt;ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿದ್ದು, ಪ್ರಯಾಣಿಕರ ಅನುಕೂಲಕ್ಕೆ ಅನುಗುಣವಾಗಿ ವಿವಿಧ ವರ್ಗಗಳ ವ್ಯವಸ್ಥೆ ಮಾಡಲಾಗಿದೆ.&lt;/p&gt;&lt;p&gt;1 ಎಸಿ 2-ಟೈರ್ ಕೋಚ್&lt;/p&gt;&lt;p&gt;6 ಎಸಿ 3-ಟೈರ್ ಕೋಚ್&zwnj;ಗಳು&lt;/p&gt;&lt;p&gt;7 ಸ್ಲೀಪರ್ ಕ್ಲಾಸ್ ಕೋಚ್&zwnj;ಗಳು&lt;/p&gt;&lt;p&gt;4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್&zwnj;ಗಳು&lt;/p&gt;&lt;p&gt;1 ಲಗೇಜ್ ಮತ್ತು ಜನರೇಟರ್-ಕಮ್-ಬ್ರೇಕ್ ವ್ಯಾನ್&lt;/p&gt;&lt;p&gt;1 ಎಸ್&zwnj;ಎಲ್&zwnj;ಆರ್/ಡಿ ಕೋಚ್&lt;/p&gt;&lt;h2&gt;ಪ್ರಯಾಣಿಕರಿಗೆ ಅನುಕೂಲ&lt;/h2&gt;&lt;p&gt;ಈ ವಿಶೇಷ ರೈಲು ಸೇವೆಯಿಂದ ಕರ್ನಾಟಕದಿಂದ ಈಶಾನ್ಯ ಭಾರತದತ್ತ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ದೊರೆಯಲಿದೆ. ಬೇಸಿಗೆ ರಜೆ ಸಮಯದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಸಹಕಾರಿ ಆಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪ್ರಯಾಣಿಕರು ಮುಂಗಡವಾಗಿ ಟಿಕೆಟ್&zwnj;ಗಳನ್ನು ಕಾಯ್ದಿರಿಸಿಕೊಂಡು ಈ ವಿಶೇಷ ಸೇವೆಯ ಪ್ರಯೋಜನ ಪಡೆಯಬಹುದು.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/state/south-western-railway-summer-special-train-between-hubballi-and-new-tinsukia-announced-to-manage-holiday-rush-gdp/articleshow-gck1k9g"/>
        </item>
        <item>
            <title><![CDATA[ಮತ್ತೆ ಗಂಟೆಗಟ್ಟಲೇ ಸುತ್ತಾಡಿದ ಫ್ಲೈ-91; ಇದೇ ಅವಧಿ ಲ್ಯಾಂಡ್‌-ಟೇಕಾಫ್‌ ಆದ ಇಂಡಿಗೋ ಪ್ಲೇನ್]]></title>
            <link>https://kannada.asianetnews.com/karnataka-districts/fly-91-plane-hovered-in-the-sky-for-more-than-an-hour-due-to-severe-weather-conditions-mrq/articleshow-gz7izu2</link>
            <guid isPermaLink="true">https://kannada.asianetnews.com/karnataka-districts/fly-91-plane-hovered-in-the-sky-for-more-than-an-hour-due-to-severe-weather-conditions-mrq/articleshow-gz7izu2</guid>
            <pubDate>Thu, 23 Apr 2026 07:29:21 +0530</pubDate>
            <description><![CDATA[&lt;p&gt;ಮಂಗಳವಾರ ರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಫ್ಲೈ-91 ವಿಮಾನವು ಹವಾಮಾನ ವೈಪರೀತ್ಯದ ಕಾರಣ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಸುತ್ತಾಡಿದೆ. ಐದು ದಿನಗಳಲ್ಲಿ ಇದು ಎರಡನೇ ಬಾರಿಯಾಗಿದ್ದು, ಇದೇ ಸಮಯದಲ್ಲಿ ಇಂಡಿಗೋ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpmggt36v25zwd2cf40zmb8w,imgname-hubballi-airport--5--1776657393766.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ&lt;/strong&gt;: ಕಳೆದ ಎರಡು ದಿನದ ಹಿಂದೆಯಷ್ಟೇ ಬರೋಬ್ಬರಿ 3 ಗಂಟೆ ಕಾಲ ಆಗಸದಲ್ಲೇ ಸುತ್ತಾಡಿ ಆತಂಕ ಸೃಷ್ಟಿಸಿದ್ದ ಫ್ಲೈ- 91 ವಿಮಾನ ಮಂಗಳವಾರ ರಾತ್ರಿ ಮತ್ತೆ ಒಂದು ಗಂಟೆಗೂ ಅಧಿಕ ಕಾಲ ಆಗಸದಲ್ಲೇ ಸುತ್ತಾಡಿದೆ.&lt;/p&gt;&lt;p&gt;ಈಗಲೂ ಹವಾಮಾನ ವೈಪರೀತ್ಯವೇ ಕಾರಣ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಆದರೆ, ಉಳಿದ ವಿಮಾನಗಳಿಗೆ ಆಗದ ಹವಾಮಾನ ಸಮಸ್ಯೆ ಈ ಸಂಸ್ಥೆಯ ವಿಮಾನಕ್ಕಷ್ಟೇ ಏಕೆ ಆಗುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕರದ್ದು. ಕಾರ್ಯಾರಂಭ ಮಾಡಿದ 5 ದಿನದಲ್ಲಿ ಎರಡನೇ ಬಾರಿ ಆತಂಕ ಸೃಷ್ಟಿಸಿದೆ.&lt;/p&gt;&lt;h2&gt;&lt;strong&gt;ಆಗಿದ್ದೇನು?&lt;/strong&gt;&lt;/h2&gt;&lt;p&gt;ಮಂಗಳವಾರ ಸಂಜೆ ಫ್ಲೈ- 91 ವಿಮಾನ ಬೆಂಗಳೂರಿನಿಂದ ಹೊರಟು 8.20ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್&zwnj; ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಮಳೆ ಇದ್ದ ಪರಿಣಾಮ ಲ್ಯಾಂಡ್&zwnj; ಆಗಲು ಸಾಧ್ಯವಾಗದೇ, ಆಗಸದಲ್ಲೇ ಒಂದು ಗಂಟೆಗೂ ಅಧಿಕ ಕಾಲ ಸುತ್ತಿದೆ. ಬಳಿಕ 9.30ಕ್ಕೆ ಸುರಕ್ಷಿತವಾಗಿ ಲ್ಯಾಂಡ್&zwnj; ಆಗಿದೆ. ಈ ನಡುವೆ ಇದೇ ವೇಳೆ 6.50ಕ್ಕೆ ಬೆಂಗಳೂರು ಬಿಟ್ಟಿದ್ದ ಇಂಡಿಗೋ ವಿಮಾನ ಹುಬ್ಬಳ್ಳಿಯಲ್ಲಿ 8.10ಕ್ಕೆ ಸುರಕ್ಷಿತವಾಗಿ ಲ್ಯಾಂಡ್&zwnj; ಆಗಿದೆ. ಜತೆಗೆ 8.50ಕ್ಕೆ ಇಲ್ಲಿಂದ ಸುರಕ್ಷಿತವಾಗಿ ಟೇಕಾಫ್&zwnj; ಕೂಡ ಆಗಿದೆ. ಅದಕ್ಕೆ ಆಗದ ಹವಾಮಾನ ವೈಪರೀತ್ಯ ಫ್ಲೈ- 91ಕ್ಕಷ್ಟೇ ಏಕೆ ಎಂಬ ಪ್ರಶ್ನೆ ಸಾರ್ವಜನಿಕರದ್ದು.&lt;/p&gt;&lt;p&gt;&amp;nbsp;&lt;/p&gt;&lt;p&gt;Hubballi: Fly91 ವಿಮಾನಕ್ಕೆ ಮಾತ್ರ ಹವಾಮಾನ ವೈಪರೀತ್ಯ ಹೇಗೆ ಸಾಧ್ಯ? ಸತ್ಯ ಮುಚ್ಚಿಟ್ಟರಾ?#Hubballi #Airport #Fly91 https://t.co/C3JxolLtGP&lt;/p&gt;&lt;p&gt;&mdash; Asianet Suvarna News (@AsianetNewsSN) April 21, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/fly-91-plane-hovered-in-the-sky-for-more-than-an-hour-due-to-severe-weather-conditions-mrq/articleshow-gz7izu2"/>
        </item>
        <item>
            <title><![CDATA[Middle East crisis: ರಸಗೊಬ್ಬರ ಬೇಕಿದ್ರೆ ಎಫ್‌ಐಡಿ ತೋರಿಸೋದು ಕಡ್ಡಾಯ!]]></title>
            <link>https://kannada.asianetnews.com/state/middle-east-crisis-it-is-mandatory-to-show-fid-if-you-want-fertilizer-rav/articleshow-hg6elqh</link>
            <guid isPermaLink="true">https://kannada.asianetnews.com/state/middle-east-crisis-it-is-mandatory-to-show-fid-if-you-want-fertilizer-rav/articleshow-hg6elqh</guid>
            <pubDate>Thu, 23 Apr 2026 05:11:07 +0530</pubDate>
            <description><![CDATA[ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಎಫ್&zwnj;ಐಡಿ (ಫಾರ್ಮರ್ಸ್&zwnj; ಐಡಿ) ಹೊಂದುವುದನ್ನು ಕಡ್ಡಾಯಗೊಳಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpvrhn78j5dbf6jy2ed675rf,imgname-untitled-design-1776900691176.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಾನಂದ ಗೊಂಬಿ&lt;/strong&gt;&lt;/p&gt;&lt;p&gt;&amp;nbsp;&lt;strong&gt;ಹುಬ್ಬಳ್ಳಿ (ಜು.23):&lt;/strong&gt; ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಯೂರಿಯಾ ಸೇರಿದಂತೆ ರಸಗೊಬ್ಬರ ತಯಾರಿಕೆ ಮೇಲೂ ಪರಿಣಾಮ ಬೀರಿದ್ದು, ಕಚ್ಚಾವಸ್ತುಗಳು ಕೊರತೆಯಾಗುವ ಆತಂಕ ಶುರುವಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಗೊಬ್ಬರ ಖರೀದಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಈ ವರ್ಷದಿಂದ ಎಫ್&zwnj;ಐಡಿ (ಫಾರ್ಮರ್ಸ್&zwnj; ಐಡಿ)ಯನ್ನು ಕಡ್ಡಾಯಗೊಳಿಸಿದೆ.&lt;/p&gt;&lt;p&gt;ಈ ವರ್ಷದಿಂದ ಯೂರಿಯಾ, ಡಿಎಪಿ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ ಎಫ್ಐಡಿ ಕಡ್ಡಾಯ. ಪ್ರತಿಯೊಬ್ಬ ರೈತರೂ ಎಫ್&zwnj;ಐಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ 20 ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದೆ.&lt;/p&gt;&lt;h2&gt;ಏನು ಕೊರತೆ?:&lt;/h2&gt;&lt;p&gt;ಗೊಬ್ಬರ ತಯಾರಿಕೆಗೆ ಪ್ರಮುಖವಾಗಿ ನೈಸರ್ಗಿಕ ಅನಿಲ ಬೇಕಾಗುತ್ತದೆ. ಇದರೊಂದಿಗೆ ಇನ್ನುಳಿದ ಕಚ್ಚಾವಸ್ತುಗಳು ಬರುವುದು ಕತಾರ್&zwnj;, ಸೌದಿ ಅರೇಬಿಯಾ ಸೇರಿದಂತೆ ಮಧ್ಯಪ್ರಾಚ್ಯದ ದೇಶಗಳಿಂದ. ಅದರಲ್ಲೂ ಬಹುಪಾಲು ಕಚ್ಚಾ ವಸ್ತು ಹೋರ್ಮುಜ್&zwnj; ಜಲಸಂಧಿ ಮಾರ್ಗದ ಮೂಲಕವೇ ಬರುತ್ತದೆ. ಸದ್ಯ ಹೋರ್ಮುಜ್&zwnj; ಜಲಸಂಧಿ ಬಹುತೇಕ ಬಂದಾಗಿದ್ದು, ಕಚ್ಚಾ ವಸ್ತುಗಳು ಬರುತ್ತಿಲ್ಲ. ಸದ್ಯಕ್ಕೆ ಬೇಕಾಗುವಷ್ಟು ಕಚ್ಚಾ ವಸ್ತುಗಳ ದಾಸ್ತಾನಿದೆ ಎಂದು ಮೂಲಗಳು ತಿಳಿಸಿವೆ. ಆದರೂ ಸಹ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ರಸಗೊಬ್ಬರ ಖರೀದಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಎಫ್&zwnj;ಐಡಿ ಕಡ್ಡಾಯಗೊಳಿಸಿ ಕೃಷಿ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿದೆ.&lt;/p&gt;&lt;h3&gt;ಯೂರಿಯಾ ಬಳಕೆಗೆ ಕಡಿವಾಣ:&lt;/h3&gt;&lt;p&gt;ರೈತರು ಯೂರಿಯಾ ಗೊಬ್ಬರವನ್ನು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದಾರೆ. ಒಂದು ಎಕರೆಗೆ 1ರಿಂದ 2 ಚೀಲವಾದರೆ ಸಾಕು. ಆದರೆ, ನಾಲ್ಕೈದು ಚೀಲದವರೆಗೂ ಬಳಕೆ ಮಾಡುತ್ತಿದ್ದಾರೆ. ಕೆಲ ಕೈಗಾರಿಕೆಗೂ ಅನಧಿಕೃತವಾಗಿ ಯೂರಿಯಾ ಬಳಕೆಯಾಗುತ್ತಿದೆ. ಕೆಲವರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಎಫ್&zwnj;ಐಡಿ ಕಡ್ಡಾಯಗೊಳಿಸಲಾಗಿದೆ.&lt;/p&gt;&lt;p&gt;ಎಫ್&zwnj;ಐಡಿಯಲ್ಲಿ ಯಾವ ರೈತರಿಗೆ ಎಷ್ಟು ಎಕರೆ ಜಮೀನಿದೆ. ಅಷ್ಟು ಜಮೀನಿಗೆ ವೈಜ್ಞಾನಿಕವಾಗಿ ಎಷ್ಟು ಗೊಬ್ಬರ ಬಳಸಿದರೆ ಉತ್ತಮ ಎಂಬುದನ್ನು ಲೆಕ್ಕ ಹಾಕಿ ಅಷ್ಟೇ ಪ್ರಮಾಣದ ರಸಗೊಬ್ಬರ ವಿತರಿಸಲು ಕೃಷಿ ಇಲಾಖೆ ನಿರ್ಧರಿಸಿದೆ.&lt;/p&gt;&lt;p&gt;ಆದರೆ, ರೈತರು ಎಫ್&zwnj;ಐಡಿಗೆ ನಿಗದಿಪಡಿಸಿದ ಗೊಬ್ಬರವನ್ನಷ್ಟೇ ಖರೀದಿಸುತ್ತಾರೆಯೇ? ಅಥವಾ ಹೆಚ್ಚಿನ ಗೊಬ್ಬರಕ್ಕೆ ಬೇಡಿಕೆ ಇಡುತ್ತಾರೆಯೇ? ಎಂಬುದನ್ನು ಕಾದು ನೋಡಬೇಕಷ್ಟೆ!.&lt;/p&gt;&lt;p&gt;&lt;strong&gt;ರಾಜ್ಯದಲ್ಲಿ ಎಷ್ಟಿದೆ ಸ್ಟಾಕ್&zwnj;?:&lt;/strong&gt;&lt;/p&gt;&lt;p&gt;ರಾಜ್ಯಕ್ಕೆ ಈ ವರ್ಷ ಯೂರಿಯಾ ಸೇರಿದಂತೆ 30 ಲಕ್ಷ ಟನ್&zwnj; ವಿವಿಧ ರಸಗೊಬ್ಬರ ಹಂಚಿಕೆಯಾಗಿದೆ. ಅದರಲ್ಲಿ ಶೇ.35-40ರಷ್ಟು (10-12 ಲಕ್ಷ ಮೆ.ಟನ್&zwnj;) ಯೂರಿಯಾ ಗೊಬ್ಬರದ ಪಾಲಿದೆ. ಸದ್ಯಕ್ಕೆ 4-5 ಲಕ್ಷ ಟನ್&zwnj; ಯೂರಿಯಾ ಸೇರಿ 11.4 ಲಕ್ಷ ಟನ್&zwnj;ನಷ್ಟು ರಸಗೊಬ್ಬರ ದಾಸ್ತಾನಿದೆ ಎಂದು ಮೂಲಗಳು ತಿಳಿಸಿವೆ.==&lt;/p&gt;&lt;p&gt;ಯೂರಿಯಾ ಸೇರಿದಂತೆ ರಸಗೊಬ್ಬರ ಬಳಕೆ ಅತಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಎಫ್&zwnj;ಐಡಿ ಕಡ್ಡಾಯಗೊಳಿಸಲಾಗಿದೆ. ಜತೆಗೆ, ಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳು ಕೊಲ್ಲಿ ದೇಶದಿಂದಲೇ ಬರಬೇಕಿರುವುದು ಕಡಿವಾಣಕ್ಕೆ ಮತ್ತೊಂದು ಕಾರಣ.&lt;/p&gt;&lt;p&gt;&lt;strong&gt;- ಮಂಜುನಾಥ ಅಂತರವಳ್ಳಿ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ.&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/middle-east-crisis-it-is-mandatory-to-show-fid-if-you-want-fertilizer-rav/articleshow-hg6elqh"/>
        </item>
        <item>
            <title><![CDATA[Hubballi KMCRI : ರಾಜ್ಯದ ಮೊದಲ ಜೀವಾಮೃತ ಬ್ಯಾಂಕ್‌ಗೆ 7147 ಮಾತೆಯರ ಎದೆಹಾಲು ದಾನ!]]></title>
            <link>https://kannada.asianetnews.com/karnataka-districts/hubballi-kmcri-states-first-jeevamrita-bank-has-collected-1530-liters-of-breast-milk-from-7147-mothers-in-two-years-mrq/articleshow-kz7b17k</link>
            <guid isPermaLink="true">https://kannada.asianetnews.com/karnataka-districts/hubballi-kmcri-states-first-jeevamrita-bank-has-collected-1530-liters-of-breast-milk-from-7147-mothers-in-two-years-mrq/articleshow-kz7b17k</guid>
            <pubDate>Mon, 20 Apr 2026 08:13:41 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯ KMCRI ಆಸ್ಪತ್ರೆಯಲ್ಲಿರುವ ರಾಜ್ಯದ ಮೊದಲ &quot;ಜೀವಾಮೃತ ಬ್ಯಾಂಕ್&zwnj;&quot; ಎರಡು ವರ್ಷಗಳಲ್ಲಿ 7147 ತಾಯಂದಿರಿಂದ 1,530 ಲೀಟರ್ ಎದೆಹಾಲು ಸಂಗ್ರಹಿಸಿದೆ. ಈ ಮಹತ್ವದ ಕಾರ್ಯದಿಂದಾಗಿ, ತಾಯಿಯ ಹಾಲಿನ ಕೊರತೆಯಿದ್ದ 2,599 ಶಿಶುಗಳಿಗೆ ಪೌಷ್ಟಿಕಾಂಶ ನೀಡಿ ಅವುಗಳ ಆರೋಗ್ಯ ರಕ್ಷಣೆಯಲ್ಲಿ ಯಶಸ್ವಿಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpmc9shawnd63b02eg6j7yvv,imgname--breast-milk--1776652969514.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಅಜೀಜಅಹ್ಮದ ಬಳಗಾನೂರ&lt;/strong&gt;&lt;/p&gt;&lt;p&gt;&lt;strong&gt;ಹುಬ್ಬಳ್ಳಿ: &lt;/strong&gt;ಇಲ್ಲಿನ ಕೆಎಂಸಿಆರ್&zwnj;ಐ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ರಾಜ್ಯದ ಮೊದಲ &quot;ಜೀವಾಮೃತ ಬ್ಯಾಂಕ್&zwnj;&quot;ಗೆ 2 ವರ್ಷದಲ್ಲೇ 7147 ಮಾತೆಯರು 1,530 ಲೀಟರ್&zwnj; ಎದೆಹಾಲು ದಾನ ಮಾಡುವ ಮೂಲಕ 2,599 ಶಿಶುಗಳಿಗೆ ಮಾತೃಸ್ಪರ್ಶ ನೀಡಿದ್ದಾರೆ.&lt;/p&gt;&lt;p&gt;ಮಗುವಿಗೆ ರೋಗ ನಿರೋಧಕ ಶಕ್ತಿ ವೃದ್ಧಿ ಹಾಗೂ ಪೌಷ್ಟಿಕಾಂಶ ಪಡೆಯಲು ತಾಯಿಯ ಹಾಲು ಬಹುಮುಖ್ಯ ಪಾತ್ರವಹಿಸುತ್ತದೆ. ಮಗು ಜನನದ ಬಳಿಕ ಕೆಲ ಬಾಣಂತಿಯರು ಎದೆಹಾಲಿನ ಕೊರತೆ ಅನುಭವಿಸುವ ಪರಿಣಾಮ ಆ ಮಗು ಹಾಲು ದೊರೆಯದೆ ಅಪೌಷ್ಟಿಕತೆಯಿಂದ ಆರೋಗ್ಯ ಸಮಸ್ಯೆ ಎದುರಿಸುವ ಸಾಧ್ಯತೆ ಇರುತ್ತದೆ. ಜತೆಗೆ ಸಾವು ಸಹ ಸಂಭವಿಸಿದ ಉದಾಹರಣೆಗಳಿವೆ.&lt;/p&gt;&lt;p&gt;ಇದನ್ನು ಮನಗಂಡು ಕೆಎಂಸಿಆರ್&zwnj;ಐನಲ್ಲಿ 2024ರ ಏ. 12ರಂದು &quot;ಹುಬ್ಬಳ್ಳಿ ಮಿಡ್&zwnj;ಟೌನ್ ರೋಟರಿ ಕ್ಲಬ್ ಮತ್ತು ಕೊಪ್ಪೆಲ್ ರೋಟರಿ ಕ್ಲಬ್&quot; (ಯುಎಸ್&zwnj;ಎ) ಸಹಯೋಗದೊಂದಿಗೆ ರಾಜ್ಯದ ಮೊದಲ &quot;ಜೀಮಾಮೃತ&quot; ಹಾಲು ಬ್ಯಾಂಕ್&zwnj; ಸ್ಥಾಪಿಸಿದೆ. ಆಸ್ಪತ್ರೆಗೆ ಹೆರಿಗೆಗೆ ಬಂದ ತಾಯಂದಿರು ಮಗುವಿಗೆ ಜನ್ಮ ನೀಡಿದ ಬಳಿಕ ಅವರಲ್ಲಿರುವ ಹೆಚ್ಚುವರಿ ಹಾಲನ್ನು ದಾನದ ರೂಪದಲ್ಲಿ ನೀಡುತ್ತಿದ್ದಾರೆ. ಹೀಗೇ ಸಂಗ್ರಹವಾದ ಹಾಲನ್ನು ಜೀವಾಮೃತ ಬ್ಯಾಂಕಿನಲ್ಲಿ ಸಂಗ್ರಹಿಸಿ ಅವಶ್ಯವಿರುವ ಮಗುವಿಗೆ ನೀಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ನಿರ್ವಹಣೆ ಹೇಗೆ?&lt;/strong&gt;&lt;/h2&gt;&lt;p&gt;ಮೊದಲಿಗೆ ಎದೆಹಾಲು ನೀಡಲು ಹಿಂದೇಟು ಹಾಕುತ್ತಿದ್ದ ಮಹಿಳೆಯರು ಬಳಿಕ ತಾವೇ ಜೀವಾಮೃತ ಬ್ಯಾಂಕ್&zwnj;ಗೆ ಬಂದು ದಾನ ಮಾಡುತ್ತಿದ್ದಾರೆ. ಈ ಕುರಿತು ಜಾಗೃತಿ ಮೂಡಿಸಿದ ಪರಿಣಾಮ ಎರಡು ವರ್ಷದಲೇ 7000ಕ್ಕೂ ಹೆಚ್ಚು ಮಾತೆಯರು ದಾನ ಮಾಡಿದ್ದಾರೆ. ಇದರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಹೀಗೆ ಸಂಗ್ರಹಗೊಂಡ ಹಾಲನ್ನು ಒಂದು ತಿಂಗಳ ವರೆಗೆ ಸಂಸ್ಕರಿಸಿ ಬೇಕಾದ ಮಗುವಿಗೆ ನೀಡಲು ಸುಸಜ್ಜಿತ ಯಂತ್ರೋಪಕರಣಗಳನ್ನು ಅಳವಡಿಸಲಾಗಿದೆ. ಈ ಯಂತ್ರದಲ್ಲಿ ಏಕಕಾಲಕ್ಕೆ 1500 ಲೀಟರ್&zwnj; ಹಾಲು ಸಂಗ್ರಹಿಸಿ ಇಡಬಹುದಾಗಿದೆ.&lt;/p&gt;&lt;h3&gt;&lt;strong&gt;7147 ತಾಯಂದಿರಿಂದ ದಾನ&lt;/strong&gt;&lt;/h3&gt;&lt;p&gt;ಈ ಬ್ಯಾಂಕ್ ಮಕ್ಕಳ ಚಿಕಿತ್ಸಾ ವಿಭಾಗದ ಅಡಿ ಕಾರ್ಯನಿರ್ವಹಿಸುತ್ತಿದ್ದು, ನಾಲ್ವರು ದಾದಿಯರು, ಇಬ್ಬರು ಗ್ರೂಪ್ ಡಿ ಕೆಲಸಗಾರರು ಮತ್ತು ಒಬ್ಬ ನೋಡಲ್ ಅಧಿಕಾರಿ ಸೇವೆಯಲ್ಲಿ ಇದ್ದಾರೆ. 7147 ತಾಯಂದಿರು 1530 ಲೀಟರ್&zwnj; ಹಾಲು ದಾನ ಮಾಡಿದ್ದಾರೆ. ಇದನ್ನು ಅವಧಿ ಪೂರ್ವ ಜನಿಸಿದ 1455 ಹಾಗೂ ಅಕಾಲಿಕವಾಗಿ ಜನಿಸಿದ 1444 ಸೇರಿ ಒಟ್ಟು 2599 ಶಿಶುಗಳಿಗೆ ನೀಡಲಾಗಿದೆ. ಈ ವರೆಗೆ 1,492 ಲೀಟರ್ ಹಾಲು ಸಂಸ್ಕರಿಸಲಾಗಿದ್ದು, 9325 ಮಿಲಿ ಲೀಟರ್&zwnj; ಹಾಲು ಈಗ ವಿತರಿಸಲು ಲಭ್ಯವಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಗಳೂರು-ಮಂತ್ರಾಲಯ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್; ಇತ್ತ ಮುಂಡಗೋಡ-ಪಣಜಿ ಬಸ್ ಸೇವೆ ಆರಂಭ&lt;/strong&gt;&lt;/p&gt;&lt;p&gt;ವಾರದ ಹಿಂದೆ ಅವಧಿಪೂರ್ವ ಗಂಡು ಮಗುವಿಗೆ ಜನ್ಮ ನೀಡಿದ್ದು, ನಾನು ಎದೆಹಾಲು ನೀಡಲು ಸಾಧ್ಯವಾಗಲಿಲ್ಲ. ಜೀವಾಮೃತ ಬ್ಯಾಂಕಿನ ಹಾಲು ನೀಡಿದ ಪರಿಣಾಮ ಮಗು ಆರೋಗ್ಯಪೂರ್ಣವಾಗಿದೆ ಎಂದು ಬಾಣಂತಿ ವಂದನಾ ಹೇಳಿದರು.&lt;/p&gt;&lt;p&gt;ಕೆಎಂಸಿಆರ್&zwnj;ಐನಲ್ಲಿ 2024ರಿಂದ ಪ್ರಾರಂಭಿಸಿರುವ ಜೀವಾಮೃತ ಹಾಲಿನ ಬ್ಯಾಂಕಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಗುವಿಗೆ ತಾಯಿಯ ಹಾಲಿನ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಕೆಎಂಸಿಆರ್&zwnj;ಐ ನಿರ್ದೇಶಕ ಡಾ. ಈಶ್ವರ ಹೊಸಮನಿ ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸುವ ಮಾರ್ಗ ಅಂತಿಮ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯೇ ಪತಿಯ ಲಾಕರ್&zwnj; ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿರುವ ಘಟನೆ ನಡೆದಿದೆ.#Udupi #Wife #Husbandhttps://t.co/JWvAaiduqu&lt;/p&gt;&lt;p&gt;&mdash; Asianet Suvarna News (@AsianetNewsSN) April 20, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hubballi-kmcri-states-first-jeevamrita-bank-has-collected-1530-liters-of-breast-milk-from-7147-mothers-in-two-years-mrq/articleshow-kz7b17k"/>
        </item>
        <item>
            <title><![CDATA[ತೀವ್ರ ವಿರೋಧದ ಬೆನ್ನಲ್ಲೇ ಧಾರವಾಡ ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗ ಸ್ಥಳಾಂತರ ಮತ್ತೆ ರದ್ದು]]></title>
            <link>https://kannada.asianetnews.com/karnataka-districts/dharwad-akashavani-all-india-radio-regional-news-division-relocation-cancelled-again-mrq/articleshow-llaqirf</link>
            <guid isPermaLink="true">https://kannada.asianetnews.com/karnataka-districts/dharwad-akashavani-all-india-radio-regional-news-division-relocation-cancelled-again-mrq/articleshow-llaqirf</guid>
            <pubDate>Thu, 23 Apr 2026 11:45:29 +0530</pubDate>
            <description><![CDATA[&lt;p&gt;Dharwad Akashvani center ಪ್ರಸಾರ ಭಾರತಿಯು ಏ.17ರಂದು ಮಾಡಿದ್ದ ಸ್ಥಳಾಂತರದ ಆದೇಶವನ್ನು ಹಿಂಪಡೆದಿದೆ. ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜೋಶಿ ಧನ್ಯವಾದ ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpgv01zecp657t5vjvacz1cd,imgname-akashavani-dharwad-1776534161390.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಇಲ್ಲಿಯ ಆಕಾಶವಾಣಿ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಹುನ್ನಾರಕ್ಕೆ ತಡೆ ಬಿದ್ದಿದೆ. ಪ್ರಸಾರ ಭಾರತಿ ಸಕ್ಷಮ ಪ್ರಾಧಿಕಾರದ ಈ ಆದೇಶಕ್ಕೆ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಾಂತರದ ಆದೇಶವನ್ನು ಪ್ರಸಾರ ಭಾರತಿ ಹಿಂಪಡೆದಿದೆ. ಉತ್ತರ ಕರ್ನಾಟಕದ ಜನತೆಯಿಂದ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್&zwnj; ಅವರನ್ನು ಸಂಪರ್ಕಿಸಿ ವಿಭಾಗವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಮನವಿ ಮಾಡಿದ್ದರು.&lt;/p&gt;&lt;p&gt;ಈ ಹಿನ್ನೆಲೆಯಲ್ಲಿ ಪ್ರಸಾರ ಭಾರತಿಯು ಏ.17ರಂದು ಮಾಡಿದ್ದ ಸ್ಥಳಾಂತರದ ಆದೇಶವನ್ನು ಹಿಂಪಡೆದಿದೆ. ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜೋಶಿ ಧನ್ಯವಾದ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ 15 ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರವಾಡ ಆಕಾಶವಾಣಿ ಪ್ರಸಾರ ಹೊಂದಿದೆ.&lt;/p&gt;&lt;h2&gt;&lt;strong&gt;ಈ ಹಿಂದೆಯೂ ವಿರೋಧ ವ್ಯಕ್ತವಾಗಿತ್ತು!&lt;/strong&gt;&lt;/h2&gt;&lt;p&gt;ಈ ಹಿಂದೆ 2020 ಹಾಗೂ 2023ರಲ್ಲೂ ಇದೇ ರೀತಿಯ ಆದೇಶ ಬಂದಾಗ ಸ್ಥಳೀಯರ ವಿರೋಧದಿಂದ ಸ್ಥಳಾಂತರದ ನಿರ್ಧಾರ ಕೈ ಬಿಡಲಾಗಿತ್ತು. ಈಗ ಮತ್ತೆ ಸ್ಥಳಾಂತರದ ಆದೇಶ ಬಂದಿದ್ದು, ಪ್ರಸಾರ ಭಾರತಿಯು ಈ ನಿರ್ಧಾರ ಕೈ ಬಿಡದೇ ಇದ್ದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದರು.ಈ ವಿಭಾಗದ ಮಹತ್ವ ಏನು?:&lt;/p&gt;&lt;p&gt;ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ 15 ಜಿಲ್ಲೆಗಳ ಮಹತ್ವದ ಸುದ್ದಿ ಪ್ರಸಾರ ಕೇಂದ್ರವಿದು. ಈ ವಿಭಾಗದಿಂದ ಪ್ರಸಾರ ಆಗುವ ಬೆಳಗಿನ 7.05ರ ಪ್ರದೇಶ ಸಮಾಚಾರವನ್ನು 5.5 ಕೋಟಿ ಜನರು ಕೇಳುತ್ತಾರೆ ಎಂಬುದನ್ನು ಶ್ರೋತೃ ಸಂಶೋಧನಾ ವಿಭಾಗ ಮಾಡಿದ ಸಮೀಕ್ಷೆಯಲ್ಲಿಯೇ ಬಹಿರಂಗವಾಗಿದೆ&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dharwad-akashavani-all-india-radio-regional-news-division-relocation-cancelled-again-mrq/articleshow-llaqirf"/>
        </item>
        <item>
            <title><![CDATA[ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಮಹಾದುರಂತ; ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು]]></title>
            <link>https://kannada.asianetnews.com/gallery/state/fly91-flight-from-hyderabad-to-hubballi-lands-in-bengaluru-airport-due-to-technical-snag-mrq-lno9lyw</link>
            <guid isPermaLink="true">https://kannada.asianetnews.com/gallery/state/fly91-flight-from-hyderabad-to-hubballi-lands-in-bengaluru-airport-due-to-technical-snag-mrq-lno9lyw</guid>
            <pubDate>Mon, 20 Apr 2026 09:33:11 +0530</pubDate>
            <description><![CDATA[ಹೈದರಾಬಾದ್&zwnj;ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ವಿಮಾನವು ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲು ವಿಫಲವಾಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ವಿಮಾನ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kpmggt36v25zwd2cf40zmb8w,imgname-hubballi-airport--5--1776657393766.jpg" type="image/jpeg" height="390" width="690"/>
            <content:encoded><![CDATA[ಹೈದರಾಬಾದ್&zwnj;ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ವಿಮಾನವು ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡ್ ಆಗಲು ವಿಫಲವಾಯಿತು. ಸುಮಾರು ನಾಲ್ಕು ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ವಿಮಾನ, ಅಂತಿಮವಾಗಿ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು.&lt;img&gt;&lt;p&gt;ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಹಾದುರಂತವೊಂದು ತಪ್ಪಿದ್ದು, ನೂರಾರು ಪ್ರಯಾಣಿಕರು ಬದುಕುಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಸುಮಾರು ನಾಲ್ಕು ಗಂಟೆಗಳ ಆಕಾಶದಲ್ಲಿ ಸುತ್ತಿದೆ. ಕೊನೆಗೆ ವಿಮಾನ ಬೆಂಗಳೂರಿನ ಏರ್ಪೋಟ್&zwnj;ನಲ್ಲಿ ಸಂಜೆ 7.30ಕ್ಕೆ ಲ್ಯಾಂಡ್ ಆಗಿದೆ.&lt;/p&gt;&lt;img&gt;&lt;p&gt;ಹೈದರಾಬಾದ್&zwnj;ನಿಂದ ಹುಬ್ಬಳ್ಳಿಗೆ ಬರುತ್ತಿದ್ದ Fly91 ಏರ್ ಲೈನ್ಸ್ IC3401 (ATRTURBOPROP AT7) ನಿಗದಿಯಂತೆ ಸಂಜೆ 4.30ಕ್ಕೆ ಲ್ಯಾಂಡ್ ಆಗಬೇಕಿತ್ತು. ವಿಮಾನದಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡ ಹಿನ್ನೆಲೆ ಮುಂಡಗೋಡ, ದಾವಣಗೆರೆ , ಶಿವಮೊಗ್ಗ ಆಗಸದಲ್ಲಿಯೇ ಸುತ್ತಾಡಿದೆ. ಇದೇ ವೇಳೆ ವಿಮಾನ ಪೈಲಟ್&zwnj;ನ ನಿಯಂತ್ರಣ ಕಳೆದುಕೊಂಡಿತ್ತು ಎಂಬ ಮಾತುಗಳು ಸಹ ಕೇಳಿ ಬಂದಿವೆ.&lt;/p&gt;&lt;img&gt;&lt;p&gt;ಸುಮಾರು ಸಮಯ ವಿಮಾನ ಸುತ್ತಾಟದಿಂದ ಆತಂಕಗೊಂಡ ಪ್ರಯಾಣಿಕರು ಕಣ್ಣೀರು ಹಾಕುತ್ತಾ ತಮ್ಮ ಕುಟುಂಬಸ್ಥರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ. ಕೆಲ ಪ್ರಯಾಣಿಕರು ಭಯದಿಂದ ಕಣ್ಣೀರು ಹಾಕಿರುವ ವಿಡಿಯೋ ಏಷ್ಯಾನೆಟ್ ಸುವರ್ಣನ್ಯೂಸ್&zwnj;ಗೆ ಲಭ್ಯವಾಗಿದೆ. ಪೈಲಟ್ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ಕೆಲ ಪ್ರಯಾಣಿಕರು ನಮ್ಮನ್ನು ವಾಪಸ್&zwnj; ಹೈದಾರಾಬಾದ್&zwnj;ಗೆ ಕರೆದುಕೊಂಡು ಹೋಗಿ, ಇಲ್ಲವಾದ್ರೆ ಸಮೀಪದ ಬೆಳಗಾವಿ ಅಥವಾ ಬೆಂಗಳೂರಿನ ನಿಲ್ದಾಣದಲ್ಲಾದ್ರೂ ವಿಮಾನ ಲ್ಯಾಂಡ್ ಮಾಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಏನಾಗ್ತಿದೆ ಎಂಬುದರ ಬಗ್ಗೆ ನಮಗೆಲ್ಲರಿಗೂ ಮಾಹಿತಿ ನೀಡಬೇಕು ಎಂದು ಪ್ರಯಾಣಿಕರೊಬ್ಬರು ಸಿಬ್ಬಂದಿ ಬಳಿ ಮನವಿ ಮಾಡಿಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೊಲಿವಿಯಾದಲ್ಲಿ ಸರಕು ಸಾಗಣೆ ವಿಮಾನ ಪತನ : 15 ಮಂದಿ ಸಾವು&lt;/strong&gt;&lt;/p&gt;&lt;img&gt;&lt;p&gt;ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮೆಲ್ಲರ ಸುರಕ್ಷತೆಯೇ ನಮ್ಮೆಲ್ಲರ ಮೊದಲ ಆದ್ಯತೆಯಾಗಿದ್ದು, ಯಾರೂ ಆತಂಕಕ್ಕೊಳಗಾಗಬೇಡಿ. ಸೂಚಿಸಲಾಗುತ್ತಿರುವ ನಿಯಮಗಳನ್ನು ಪಾಲನೆ ಮಾಡಿಕೊಳ್ಳಿ ಎಂದು ಸಿಬ್ಬಂದಿ ಪ್ರಯಾಣಿಕರಿಗೆ ಹೇಳುತ್ತಿರೋದು ವಿಡಿಯೋದಲ್ಲಿ ಸೆರೆಯಾಗಿದೆ. ಅಂತಿಮವಾಗಿ ವಿಮಾನ ಸುರಕ್ಷಿತವಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. Fly91 ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;121 ಜನರಿದ್ದ ಸೇನಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪತನ! 60ಕ್ಕೂ ಅಧಿಕ ಸಾವು&lt;/strong&gt;&lt;/p&gt;&lt;p&gt;&lt;/p&gt;]]></content:encoded>
            <category>dharwad</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/state/fly91-flight-from-hyderabad-to-hubballi-lands-in-bengaluru-airport-due-to-technical-snag-mrq-lno9lyw"/>
        </item>
        <item>
            <title><![CDATA[ಎಂಎನ್‌ಸಿಗಳಿಗೆ ಸಿಗುತ್ತಿರುವ ಆದ್ಯತೆ ಎಂಎಸ್‌ಎಂಇಗಳಿಗೆ ಸಿಗ್ತಿಲ್ಲ: ಸಚಿವ ಸಂತೋಷ್ ಲಾಡ್]]></title>
            <link>https://kannada.asianetnews.com/karnataka-districts/msme-issues-india-santosh-lad-criticism-central-government-gvd/articleshow-such9nd</link>
            <guid isPermaLink="true">https://kannada.asianetnews.com/karnataka-districts/msme-issues-india-santosh-lad-criticism-central-government-gvd/articleshow-such9nd</guid>
            <pubDate>Sun, 26 Apr 2026 21:49:48 +0530</pubDate>
            <description><![CDATA[&lt;p&gt;ಭಾರತದ ಆರ್ಥಿಕತೆ ಹಾಗೂ ಉದ್ಯೋಗ ನೀಡಿಕೆಯಲ್ಲಿ ಸಣ್ಣ ಕೈಗಾರಿಕೆಗಳ (ಎಂಎಸ್&zwnj;ಎಂಇ) ಪಾತ್ರ ಅತ್ಯಂತ ನಿರ್ಣಾಯಕ. ಆದರೆ, ಅವುಗಳ ಸಮಸ್ಯೆಗಳನ್ನೇ ಹತ್ತಿಕ್ಕಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kanmajzr0qcta9d5vdwpve9k,imgname-santosh-lad--1--1763810036728.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಏ.26): &lt;/strong&gt;ಭಾರತದ ಆರ್ಥಿಕತೆ ಹಾಗೂ ಉದ್ಯೋಗ ನೀಡಿಕೆಯಲ್ಲಿ ಸಣ್ಣ ಕೈಗಾರಿಕೆಗಳ (ಎಂಎಸ್&zwnj;ಎಂಇ) ಪಾತ್ರ ಅತ್ಯಂತ ನಿರ್ಣಾಯಕ. ಆದರೆ, ಅವುಗಳ ಸಮಸ್ಯೆಗಳನ್ನೇ ಹತ್ತಿಕ್ಕಲಾಗುತ್ತಿದೆ. ಎಂಎಸ್&zwnj;ಎಂಇಗಳು ಕೇವಲ ರಾಜಕೀಯ ಪ್ರೋತ್ಸಾಹವನ್ನು ಅವಲಂಬಿಸುವುದನ್ನು ಬಿಟ್ಟು, ನೀತಿ ನಿರೂಪಣೆಯಲ್ಲಿ ತಮ್ಮ ಹಕ್ಕನ್ನು ಪ್ರತಿಪಾದಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.&lt;/p&gt;&lt;p&gt;ಮೆಕ್&zwnj; ಇನ್&zwnj; ಇಂಡಿಯಾ, ಸ್ಟಾರ್ಟ್&zwnj;ಅಪ್&zwnj; ಸೇರಿದಂತೆ ಕೇಂದ್ರ ಸರ್ಕಾರದ ಕೈಗಾರಿಕಾ ನೀತಿಗಳ ವಿರುದ್ಧ ಹರಿಹಾಯ್ದರಲ್ಲದೇ, ತಲಾಆದಾಯದಲ್ಲಿ ಹಿಂದುಳಿದಿದ್ದೇವೆ. ಆದರೆ, ಆ ಬಗ್ಗೆ ಚರ್ಚೆಯಾಗ್ತಿಲ್ಲ. 4 ಟ್ರಿಲಿಯನ್&zwnj; ಜನಸಂಖ್ಯೆಯ ಪ್ರತಿಫಲ. ಇದರಲ್ಲಿ ಕೇಂದ್ರದ್ದೇನೂ ಸಾಧನೆಯಿಲ್ಲ ಎಂದು ಕಿಡಿಕಾರಿದರು.&lt;/p&gt;&lt;p&gt;ಕೆಸಿಸಿಐ ಇಲ್ಲಿನ ಅಮರಗೋಳ ಎಪಿಎಂಸಿಯಲ್ಲಿ ಆಯೋಜಿಸಿರುವ ಇನ್&zwnj;ಕಾಮೆಕ್ಸ್&zwnj; -2026 ಕಾರ್ಯಕ್ರಮದಲ್ಲಿ ತಮ್ಮದೇ ಸ್ಟ್ರೈಲ್&zwnj;ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದಕ್ಕೂ ಮುಂಚೆ ಭಾಷಣ ಮಾಡಿ ತೆರಳಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಕೇಂದ್ರದ ಸಾಧನೆ ಟೀಕಿಸುವ ಮೂಲಕ ಇಬ್ಬರಿಗೂ ತಮ್ಮ ಭಾಷಣದುದ್ದಕ್ಕೂ ಟಾಂಗ್&zwnj; ನೀಡಿದರು.&lt;/p&gt;&lt;p&gt;ದೇಶದಲ್ಲಿ ಈ ವಲಯವು ಶೇ.64ರಷ್ಟು ಉದ್ಯೋಗಾವಕಾಶ ನೀಡುತ್ತದೆ. ದೇಶದ ಆರ್ಥಿಕತೆಯ ಉಳಿವು ಈ ವಲಯದ ಶಕ್ತಿಯನ್ನೇ ಅವಲಂಬಿಸಿದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸಿಗುವ ಆದ್ಯತೆ ಎಂಎಸ್&zwnj;ಎಂಇಗಳಿಗೆ ಸಿಗುತ್ತಿಲ್ಲ. ಸಬ್ಸಿಡಿ ಕೊರತೆ, ವಿಳಂಬ ಪಾವತಿ ಮತ್ತು ಸಾಂಸ್ಥಿಕ ಬೆಂಬಲದ ಕೊರತೆಯಿಂದಾಗಿ ಸ್ಥಳೀಯ ಕೈಗಾರಿಕೆಗಳು ಸಂಕಷ್ಟದಲ್ಲಿವೆ ಎಂದರು.&lt;/p&gt;&lt;h2&gt;&lt;strong&gt;ಕೆಲಸ ಮಾಡಿಸಿಕೊಳ್ಳಿ&lt;/strong&gt;&lt;/h2&gt;&lt;p&gt;ಯಾವುದೇ ರಾಜಕಾರಣಿ ಹಾಗೂ ಸರ್ಕಾರವನ್ನು ಒಲೈಕೆ ಮಾಡಬೇಡಿ. ಕರ್ನಾಟಕದಲ್ಲಿ ನೀವು 70 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದೀರಿ. ನೀವು ಕೇವಲ ಒಂದು ದಿನ ಕೆಲಸ ನಿಲ್ಲಿಸಿ ಬೀದಿಗಿಳಿದರೆ, ಪ್ರತಿಯೊಂದು ರಾಜಕೀಯ ಪಕ್ಷವೂ ನಿಮ್ಮ ಮಾತಿಗೆ ಓಗೊಡುತ್ತದೆ. ನಿಮ್ಮ ಶಕ್ತಿ ಅರಿತುಕೊಂಡು ಸರ್ಕಾರಗಳಿಂದ ಕೆಲಸ ಮಾಡಿಸಿಕೊಳ್ಳಿ ಎಂದರು. ಕಳೆದ ದಶಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಸಣ್ಣ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ. ದೊಡ್ಡ ಮೀನುಗಳು ಸಣ್ಣ ಮೀನುಗಳನ್ನು ತಿನ್ನುತ್ತಾ ಹೋದರೆ, ಸಣ್ಣ ಕೈಗಾರಿಕೆಗಳು ಹೇಗೆ ಬದುಕಲು ಸಾಧ್ಯ? ಎಂದು ಅವರು ಪ್ರಶ್ನಿಸಿದರು.&lt;/p&gt;&lt;p&gt;ಸ್ಟಾರ್ಟ್&zwnj;ಆಪ್&zwnj;, ಮೇಕ್&zwnj; ಇನ್&zwnj; ಇಂಡಿಯಾ ಬಗ್ಗೆಯೆಲ್ಲ ಭಾರೀ ಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಭಾರತ 4 ಟ್ರಿಲಿಯನ್&zwnj; ಡಾಲರ್&zwnj; ಆರ್ಥಿಕತೆಯತ್ತ ಸಾಗಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಜನಸಂಖ್ಯಾ ಬೆಳವಣಿಗೆಯ ಪ್ರತಿಫಲ. ಇದರಲ್ಲೇನು ವಿಶೇಷ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್&zwnj; ನೀಡಿದರು. ಜಪಾನ್, ಚೀನಾ ಮತ್ತು ಅಮೆರಿಕದಂತಹ ದೇಶಗಳಿಗೆ ಹೋಲಿಸಿದರೆ ಭಾರತದ ತಲಾ ಆದಾಯ ಇಂದಿಗೂ ಗಣನೀಯವಾಗಿ ಕಡಿಮೆಯಿದೆ. ಆದರೆ ಈ ಬಗ್ಗೆಯೆಲ್ಲ ಚರ್ಚೆಯೇ ಆಗುವುದಿಲ್ಲ ಎಂದು ಟೀಕಿಸಿದರು.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/msme-issues-india-santosh-lad-criticism-central-government-gvd/articleshow-such9nd"/>
        </item>
        <item>
            <title><![CDATA[ವಿನಯ್ ಕುಲಕರ್ಣಿ ಶಿಕ್ಷೆ ಹಿಂದಿದೆ ಬಿಜೆಪಿ 'ಒಳಸಂಚು': ನನಗೂ ಹೀಗೆಯೇ ಕಿರುಕುಳ ಕೊಟ್ಟಿದ್ದರು! ಡಿಕೆಶಿ ಸ್ಫೋಟಕ ಹೇಳಿಕೆ]]></title>
            <link>https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11</link>
            <guid isPermaLink="true">https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11</guid>
            <pubDate>Fri, 17 Apr 2026 18:32:04 +0530</pubDate>
            <description><![CDATA[&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾದ ಜೀವಾವಧಿ ಶಿಕ್ಷೆಯು ಬಿಜೆಪಿಯ ರಾಜಕೀಯ ಪಿತೂರಿಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕುಲಕರ್ಣಿಯವರ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಅವರನ್ನು ಸಿಲುಕಿಸಲಾಗಿದೆ ಎಂದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpdr9z7v0em636q8kj0wtycz,imgname-dk-shivakumar-about-vinay-kulkarni-in-jail-1776430677243.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನವದೆಹಲಿ (ಏ.17): ಧಾ&lt;/strong&gt;ರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯ ಬಗ್ಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ವಿನಯ್ ಕುಲಕರ್ಣಿ ವಿರುದ್ಧದ ಈ ತೀರ್ಪಿನ ಹಿಂದೆ ರಾಜಕೀಯ ಪಿತೂರಿ ಇದೆ' ಎಂದು ನೇರವಾಗಿ ಬಿಜೆಪಿಯತ್ತ ಬೆರಳು ತೋರಿಸಿದ್ದಾರೆ.&lt;/p&gt;&lt;h3&gt;&lt;strong&gt;ಇದು ಬಿಜೆಪಿಯ ರಾಜಕೀಯ ಒಳಸಂಚು:&lt;/strong&gt;&lt;/h3&gt;&lt;p&gt;'ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಆದರೆ ಈ ಇಡೀ ಪ್ರಕರಣದ ತನಿಖೆ ನಡೆದ ಹಾದಿಯಲ್ಲಿ ದೊಡ್ಡ ಒಳಸಂಚು ಅಡಗಿದೆ. ಬಿ-ರಿಪೋರ್ಟ್ ಸಲ್ಲಿಕೆಯಾಗುವ ಹಂತದಲ್ಲಿದ್ದ ಪ್ರಕರಣವನ್ನು ಮತ್ತೆ ಕೆದಕಿ ಅವರನ್ನು ಸಿಲುಕಿಸಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿನಯ್ ಕುಲಕರ್ಣಿ ಅವರು ದೊಡ್ಡ ಶಕ್ತಿಯಾಗಿ ಬೆಳೆಯುತ್ತಿದ್ದರು. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ನಾಯಕರು, ಅವರನ್ನು ರಾಜಕೀಯವಾಗಿ ಮುಗಿಸಲು ಈ ಸಂಚು ರೂಪಿಸಿದ್ದಾರೆ' ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದರು.&lt;/p&gt;&lt;h2&gt;&lt;strong&gt;ನನಗೂ ಕಿರುಕುಳ ನೀಡಿದ್ದರು:&lt;/strong&gt;&lt;/h2&gt;&lt;p&gt;ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡ ಡಿಕೆಶಿ, 'ನನಗೂ ಇದೇ ರೀತಿ ಕಿರುಕುಳ ನೀಡಲಾಗಿತ್ತು. ನಾನು ಜೈಲಿಗೆ ಹೋಗಿ ಬಂದೆ, ಆದರೆ ಅಂತಿಮವಾಗಿ ಸುಪ್ರೀಂಕೋರ್ಟ್&zwnj;ನಲ್ಲಿ ನನಗೆ ನ್ಯಾಯ ಸಿಕ್ಕಿತು. ವಿನಯ್ ಕುಲಕರ್ಣಿ ಅವರ ಕುಟುಂಬದ ಜೊತೆ ನಾನು ಮಾತನಾಡಿದ್ದೇನೆ. ಅವರು ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನನಗಿದೆ. ಕಾನೂನಿನಲ್ಲಿ ಇನ್ನು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ, ಅವರನ್ನು ನಂಬಿದ ದೇವರು ಕೈಬಿಡುವುದಿಲ್ಲ' ಎಂದು ಧೈರ್ಯ ತುಂಬಿದರು.&lt;/p&gt;&lt;h2&gt;&lt;strong&gt;ಸಚಿವ ಸ್ಥಾನ ಮತ್ತು ಜಮೀರ್ ರಾಜೀನಾಮೆ:&lt;/strong&gt;&lt;/h2&gt;&lt;p&gt;ರಾಜ್ಯ ಕಾಂಗ್ರೆಸ್&zwnj;ನಲ್ಲಿ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ಒತ್ತಡ ಹೇರುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಅದೆಲ್ಲವೂ ಹಿರಿಯ ಶಾಸಕರಿಗೆ ಬಿಟ್ಟಿದ್ದು. ನಮ್ಮಲ್ಲಿ ಸಿದ್ದರಾಮಯ್ಯ ತಂಡ ಅಥವಾ ಡಿ.ಕೆ. ಶಿವಕುಮಾರ್ ತಂಡ ಎಂಬ ಭೇದವಿಲ್ಲ. ದೆಹಲಿಗೆ ಬರುವ ವಿಚಾರದ ಬಗ್ಗೆ ಮುಖ್ಯಮಂತ್ರಿಗಳೇ ಉತ್ತರಿಸುತ್ತಾರೆ' ಎಂದರು. ಇನ್ನು ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದ ಡಿಕೆಶಿ, 'ಈ ಬಗ್ಗೆ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಪತ್ರಿಕೆಗಳಲ್ಲಿ ಬಂದ ಸುದ್ದಿ ಬಗ್ಗೆ ನನಗೆ ಗೊತ್ತಿಲ್ಲ' ಎಂದು ಸ್ಪಷ್ಟಪಡಿಸಿದರು.&lt;/p&gt;&lt;h3&gt;&lt;strong&gt;ಮುಸ್ಲಿಂ ನಾಯಕರು ಟಾರ್ಗೆಟ್ ಆಗಿಲ್ಲ:&lt;/strong&gt;&lt;/h3&gt;&lt;p&gt;ಅಲ್ಪಸಂಖ್ಯಾತ ನಾಯಕರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, 'ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ನೀಡಿದಷ್ಟು ಬೆಂಬಲವನ್ನು ಬೇರೆ ಯಾರೂ ನೀಡಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರವು ಕೇವಲ ಅಲ್ಪಸಂಖ್ಯಾತರ ಸೀಟು ಅಲ್ಲ, ಅಲ್ಲಿ ಶಾಮನೂರು ಶಿವಶಂಕರಪ್ಪ ಅವರು ದಶಕಗಳಿಂದ ಕ್ಷೇತ್ರವನ್ನು ಉಳಿಸಿಕೊಂಡು ಬಂದಿದ್ದಾರೆ. ಟಿಕೆಟ್ ಹಂಚಿಕೆ ಕೆಲವು ವರದಿಗಳ ಆಧಾರದ ಮೇಲೆ ನಡೆದಿದೆ. ಯಾರನ್ನೂ ನಾವು ಟಾರ್ಗೆಟ್ ಮಾಡುತ್ತಿಲ್ಲ' ಎಂದು ಸಮರ್ಥಿಸಿಕೊಂಡರು.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/dk-shivakumar-reaction-on-vinay-kulkarni-life-imprisonment-bjp-conspiracy-allegation-sat/articleshow-x0trr11"/>
        </item>
        <item>
            <title><![CDATA[ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪ್ಪನ ಪರ ಭಾವನಾತ್ಮಕ ಬರಹ ಬರೆದುಕೊಂಡ ವಿನಯ್ ಕುಲಕರ್ಣಿ ಪುತ್ರಿ]]></title>
            <link>https://kannada.asianetnews.com/state/vinay-kulkarnis-daughter-wrote-an-emotional-letter-in-support-of-her-father/articleshow-y5srers</link>
            <guid isPermaLink="true">https://kannada.asianetnews.com/state/vinay-kulkarnis-daughter-wrote-an-emotional-letter-in-support-of-her-father/articleshow-y5srers</guid>
            <pubDate>Sun, 19 Apr 2026 09:22:09 +0530</pubDate>
            <description><![CDATA[&lt;p&gt;ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ನಂತರ, ಅವರ ಪುತ್ರಿ ದೀಪಾಲಿ ಕುಲಕರ್ಣಿ ಇನ್ಸ್ಟಾಗ್ರಾಮ್&zwnj;ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ತಂದೆಯ ಮೇಲೆ ಸಂಪೂರ್ಣ ನಂಬಿಕೆ ಇದೆ ಮತ್ತು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kphxfcv600phw76644gafmw5,imgname-vinay-kulkarni-daughter-1776570315621.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಅಪ್ಪನ ಪರ ವಿನಯ್&zwnj; ಕುಲಕರ್ಣಿ ಪುತ್ರಿ ಭಾವನಾತ್ಮಕ ಬರಹ:&lt;/strong&gt;&lt;/h2&gt;&lt;p&gt;ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಪರ ಪುತ್ರಿ ದೀಪಾಲಿ ವಿ. ಕುಲಕರ್ಣಿ ಭಾವನಾತ್ಮಕ ಬರಹವೊಂದನ್ನು ಬರೆದುಕೊಂಡು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ತಂದೆಯ ಜೊತೆಗೆ ಇರುವ ಬಾಲ್ಯದ ಹಳೆಯ ಫೋಟೋಗಳನ್ನು ಹಂಚಿಕೊಂಡಿರುವ ದೀಪಾಲಿ ತಂದೆಯ ಪರವಾಗಿ ಉದ್ದನೇಯ ಬರಹ ಬರೆದಿದ್ದಾರೆ. ಅವರ ಜೊತೆಗೆ ತಾವು ಸದಾ ಇರುತ್ತೇವೆ ಹಾಗೂ ಅವರ ವಿರುದ್ಧದ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದೇವೆ. ಜೊತೆಯಾಗಿ ನಾವು ಈ ಸಂಕಷ್ಟವನ್ನು ದಾಟಿ ಮುಂದೆ ಸಾಗುತ್ತೇವೆ. ಎಲ್ಲದರಂತೆ ಈ ಕಷ್ಟವೂ ಕಳೆದು ಹೋಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ವಿನಯ್ ಕುಲಕರ್ಣಿ ಅವರ ಕಿರಿಯ ಪುತ್ರಿ ದೀಪಾಲಿ ವಿ. ಕುಲಕರ್ಣಿ ಅವರು ಬರೆದಿರುವ ಪೋಸ್ಟ್ ಹೀಗಿದೆ ನೋಡಿ...&lt;/strong&gt;&lt;/p&gt;&lt;p&gt;&quot;ಉತ್ತರ ಕರ್ನಾಟಕದಾದ್ಯಂತ, ವಿದ್ಯಾರ್ಥಿ ನಾಯಕರಿಂದ ರಾಜ್ಯ ನಾಯಕರಾಗುವವರೆಗೆ ಅವರ ಪಯಣವನ್ನು ಜನರು ಸಾಕ್ಷಿಯಾಗಿ ನೋಡಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ ಕಾರ್ಯಾಚರಣೆಯನ್ನು ನಿರ್ಮಿಸಿ ನಿರ್ವಹಿಸಿದವರು, ಯುವ ರೈತರಿಗೆ ಪ್ರೇರಣೆಯಾದವರು. ಅವರು ಯಾವಾಗಲೂ ಎಲ್ಲ ವಯಸ್ಸಿನ ಜನರೊಂದಿಗೆ ಸರಳವಾಗಿ ಬೆರೆತವರು, ಗೌರವದಿಂದ ವರ್ತಿಸಿದವರು ಮತ್ತು ಸಹಾಯಕ್ಕೆ ಸದಾ ಸಿದ್ಧರಾಗಿದ್ದವರು.&lt;/p&gt;&lt;p&gt;ಜನರಿಗಾಗಿ ಬದುಕಿದ ನಾಯಕನಾಗಿ, ಅವರು ತಮ್ಮ ಜೀವನವನ್ನೇ ಸಾರ್ವಜನಿಕ ಸೇವೆಗೆ ಅರ್ಪಿಸಿದ್ದಾರೆ. ಅನೇಕ ಕುಟುಂಬಗಳಿಗೆ ಅವರು ಕೇವಲ ನಾಯಕನಲ್ಲ, ತಮ್ಮವರಲ್ಲೊಬ್ಬರು. ನಾವು ಅವರನ್ನು ಯಾವಾಗಲೂ ಅವರ ಕೆಲಸಗಳಿಂದಲೇ ಗುರುತಿಸಿದ್ದೇವೆ. ಅವರು ಎಂದೆಂದಿಗೂ ನಮ್ಮ ನಾಯಕ, ನಮ್ಮ ಮಾರ್ಗದರ್ಶಕ ಮತ್ತು ನಮ್ಮ ಅತಿ ದೊಡ್ಡ ಹೆಮ್ಮೆ.&lt;/p&gt;&lt;p&gt;ನಾವು ದೃಢವಾಗಿದ್ದೇವೆ. ಅವರ ನೈತಿಕತೆ ಮತ್ತು ಸತ್ಯದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಈ ವಿಷಯಕ್ಕೆ ಸಾರ್ವಜನಿಕ ಗಮನ ಮತ್ತು ವಿಭಿನ್ನ ಅಭಿಪ್ರಾಯಗಳು ಸಾಕಷ್ಟು ಬಂದಿವೆ ಎಂಬುದನ್ನೂ ನಾವು ಅರಿತಿದ್ದೇವೆ. ನ್ಯಾಯಾಂಗ ಪ್ರಕ್ರಿಯೆಗೆ ನಾವು ಗೌರವ ನೀಡುತ್ತೇವೆ ಮತ್ತು ಮೇಲ್ಮನವಿ ನ್ಯಾಯಾಲಯಗಳತ್ತ ಪೂರ್ಣ ನಂಬಿಕೆಯಿಂದ ಮುಂದುವರಿಯುತ್ತಿದ್ದೇವೆ.&lt;/p&gt;&lt;p&gt;ನಮಗೆ ದೊರೆತಿರುವ ಪ್ರೀತಿ, ಪ್ರಾರ್ಥನೆಗಳು ಮತ್ತು ಬೆಂಬಲಕ್ಕಾಗಿ ನಾವು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇವೆ. ಒಟ್ಟಾಗಿ, ನಾವು ಬಲವಾಗಿ ನಿಲ್ಲುತ್ತೇವೆ. ನಾವು ಇದನ್ನೂ ದಾಟುತ್ತೇವೆ. ಇದು ಕೂಡ ಸಾಗಿಹೋಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ&quot;.&lt;/p&gt;&lt;h3&gt;&lt;strong&gt;ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ 16 ಜನರಿಗೆ ಜೀವಾವಧಿ ಶಿಕ್ಷೆ&lt;/strong&gt;&lt;/h3&gt;&lt;p&gt;ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯೂ ಸೇರಿದಂತೆ 16 ಜನರಿಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು 10 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಪು ಹೊರಬಿದ್ದಿದ್ದು, ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್&zwnj;ಪೆಕ್ಟರ್&zwnj;ಗೆ 7 ವರ್ಷಗಳ ಜೈಲು ಶಿಕ್ಷೆಯಾಗಿದೆ. ಈ ಮೊತ್ತವನ್ನು ಯೋಗೇಶ್ ಗೌಡ ಅವರ ಮಕ್ಕಳಿಗೆ ಹಾಗೂ ಅವರ ಸಹೋದರ ಗುರುನಾಥ್ ಗೌಡ ಅವರಿಗೆ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್ ಇನ್ಸ್&zwnj;ಪೆಕ್ಟರ್ ಚನ್ನಕೇಶವ ಟಿಂಗರೀಕರ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;2024ರ ಟಾಪರ್ ಈಗ ಎಸಿಬಿ ಬಲೆಗೆ: 60 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಸ್&zwnj;ಡಿಎಂ ಕಾಜಲ್ ಮೀನಾ!&lt;/p&gt;&lt;p&gt;ಜೀವಾವಧಿ ಶಿಕ್ಷೆಗೆ ಒಳಗಾಗಿರುವ 16 ಅಪರಾಧಿಗಳು ಮತ್ತು 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ A19 ಅಪರಾಧಿಗೆ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೆಟ್ಟಲೇರುವ ಅವಕಾಶವಿದ್ದು, ಅದಾಗಲೇ ಅಪರಾಧಿಗಳ ವಕೀಲರು ಈ ಬಗ್ಗೆ ಮುಂದಿನ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;ವಿನಯ್ ಕುಲಕರ್ಣಿ , ವಿಕ್ರಂ ಬಳ್ಳಾರಿ, ಕೀರ್ತಿ ಕುಮಾರ್, ಸಂದೀಪ್, ವಿನಾಯಕ, ಮಹಾಬಲೇಶ್ವರ, ಸಂತೋಷ್, ದಿನೇಶ್, ಅಶ್ವತ್ಥ್, ಸುನೀಲ್, ನಜೀರ್ ಅಹ್ಮದ್, ಶಹನವಾಜ್, ನೂತನ್, ಹರ್ಷಿತ್, ಚಂದ್ರಶೇಖರ್ ಇಂಡಿ ಮತ್ತು ವಿಕಾಸ್ ಕಲಬುರಗಿ ಶಿಕ್ಷೆಗೊಳಗಾದ ಇತರ ದೋಷಿಗಳಾಗಿದ್ದಾರೆ.&lt;/p&gt;&lt;p&gt;&lt;strong&gt;ಏನಿದು ಪ್ರಕರಣ?:&lt;/strong&gt;&lt;/p&gt;&lt;p&gt;ಧಾರವಾಡದ ಜಿ.ಪಂ. ಮಾಜಿ ಸದಸ್ಯ ಯೋಗೇಶ್&zwnj; ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಈ ಪ್ರಕರಣವನ್ನು 2019ರಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಿದ ಸಿಬಿಐ ಅಧಿಕಾರಿಗಳು 2020ರ ನ.5ರಂದು ವಿನಯ್&zwnj; ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್&zwnj; ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Anusha Kb</dc:creator>
            <atom:link href="https://kannada.asianetnews.com/state/vinay-kulkarnis-daughter-wrote-an-emotional-letter-in-support-of-her-father/articleshow-y5srers"/>
        </item>
        <item>
            <title><![CDATA[ಕಾಂಗ್ರೆಸ್ಸಿನದ್ದು ವಿಕೃತ ಮನಸ್ಥಿತಿ: ಪ್ರ ಧಾನಿ ಮೋದಿ ಬಗ್ಗೆ ಖರ್ಗೆ, ರಾಹುಲ್ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಗರಂ]]></title>
            <link>https://kannada.asianetnews.com/politics/union-minister-pralhad-joshi-slams-kharge-rahul-gandhi-at-hubballi-rav/articleshow-yhsurux</link>
            <guid isPermaLink="true">https://kannada.asianetnews.com/politics/union-minister-pralhad-joshi-slams-kharge-rahul-gandhi-at-hubballi-rav/articleshow-yhsurux</guid>
            <pubDate>Wed, 22 Apr 2026 09:18:05 +0530</pubDate>
            <description><![CDATA[&lt;p&gt;ಪ್ರಧಾನಿ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದಿದ್ದಾರೆ ಎನ್ನಲಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಸಭ್ಯ ಹೇಳಿಕೆ ನೀಡಿದ್ದಾರೆನ್ನಲಾದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡವಳಿಕೆಯು ಅವರ &lsquo;ವಿಕೃತ ಮನಸ್ಥಿತಿ ಎಂದು ಕಿಡಿ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ke4n1xnvjrzzjtqd1pe35z2a,imgname-----------------------2026-01-04t193146.172-1767535343291.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಏ.22):&lt;/strong&gt; ತಮಿಳುನಾಡು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು &lsquo;ಭಯೋತ್ಪಾದಕ&rsquo; ಎಂದು ಕರೆದಿರುವ ಹಾಗೂ ರಾಹುಲ್ ಗಾಂಧಿ ಅವರು ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರ ಇಂತಹ ನಡವಳಿಕೆಯು ಅವರ &lsquo;ವಿಕೃತ ಮನಸ್ಥಿತಿ&rsquo; ಮತ್ತು &lsquo;ಸೋಲಿನ ಹತಾಶೆ&rsquo;ಯನ್ನು ಪ್ರತಿಬಿಂಬಿಸುತ್ತದೆ ಎಂದು ಗುಡುಗಿದ್ದಾರೆ.&lt;/p&gt;&lt;p&gt;ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿರುವ ಜೋಶಿ, &lsquo;ನಕಲಿ ಗಾಂಧಿ ಕುಟುಂಬದ ಓಲೈಕೆಗಾಗಿ ದಶಕಗಳ ಕಾಲ ದುರಾಡಳಿತ ನಡೆಸಿದ ಮಲ್ಲಿಕಾರ್ಜುನ ಖರ್ಗೆಯವರು, ತಮ್ಮ ಸ್ವಕ್ಷೇತ್ರವನ್ನೇ ಅಭಿವೃದ್ಧಿಪಡಿಸದೆ ಜನರಿಗೆ ದ್ರೋಹ ಬಗೆದಿದ್ದಾರೆ. ಈಗ ದೇಶದ ಹೆಮ್ಮೆಯ ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆಯುವ ಮೂಲಕ ತಮ್ಮ ಕೆಳಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ&rsquo; ಎಂದು ಕಿಡಿಕಾರಿದ್ದಾರೆ.&lt;/p&gt;&lt;p&gt;ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ವಾಗ್ದಾಳಿ ನಡೆಸಿದ್ದು, &lsquo;ಇದು ರಾಹುಲ್ ಗಾಂಧಿಯವರ ದುರಹಂಕಾರದ ಪರಮಾವಧಿ. ಸಾರ್ವಜನಿಕ ಬದುಕಿನಲ್ಲಿ ಘನತೆ ಮತ್ತು ಸಂಸ್ಕಾರ ಬಹುಮುಖ್ಯ. ಆದರೆ ರಾಹುಲ್ ಗಾಂಧಿಯವರ ಅಸಡ್ಡೆ ಹಾಗೂ ಅನಾಗರಿಕ ಮಾತುಗಳು ಅವರ ನೈಜತೆಯನ್ನು ಬಯಲು ಮಾಡಿದೆ&rsquo; ಎಂದು ಕುಟುಕಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/union-minister-pralhad-joshi-slams-kharge-rahul-gandhi-at-hubballi-rav/articleshow-yhsurux"/>
        </item>
    </channel>
</rss>
