<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 26 Jun 2026 15:10:07 +0530</lastBuildDate>
        <atom:link href="https://kannada.asianetnews.com/rss/dharwad" rel="self" type="application/rss+xml"/>
        <item>
            <title><![CDATA['ರಾಹುಲ್‌ ಗಾಂಧಿಗೇ ಗೊತ್ತಿಲ್ಲ, ನನಗೆ ಹೇಗೆ ಗೊತ್ತಾಗಬೇಕು?' ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯ]]></title>
            <link>https://kannada.asianetnews.com/state/union-minister-pralhad-joshi-attacks-karnataka-congress-at-hubballi/articleshow-zule7gg</link>
            <guid isPermaLink="true">https://kannada.asianetnews.com/state/union-minister-pralhad-joshi-attacks-karnataka-congress-at-hubballi/articleshow-zule7gg</guid>
            <pubDate>Sat, 29 Nov 2025 21:35:12 +0530</pubDate>
            <description><![CDATA[ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ಆಂತರಿಕ ಜಗಳದಿಂದ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದ್ದಾರೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ರಾಜೀನಾಮೆ ನೀಡಿ ಚುನಾವಣೆಗೆ ಬರಲಿ ಎಂದು ಅವರು ಸವಾಲು ಹಾಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kb853k4mwnndg4m5pq06xeq0,imgname-----------------------2025-11-29t212252.779-1764431613076.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ನ.29): &lt;/strong&gt;ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಒಳಜಗಳಗಳ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಿಂದಾಗಿ ರಾಜ್ಯದ ಆಡಳಿತ ಸಂಪೂರ್ಣವಾಗಿ ಅದೋಗತಿಗೆ ಇಳಿದಿದೆ ಎಂದು ಆರೋಪಿಸಿದರು.&lt;/p&gt;&lt;h2&gt;'ಜಗಳ ಇದೆ' ಕಾಂಗ್ರೆಸ್ ಒಪ್ಪಿಕೊಂಡಿದೆ:&lt;/h2&gt;&lt;p&gt;ಇಂದು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. 'ಹೈಕಮಾಂಡ್ ಹೇಳಿದ ಹಾಗೇ ಕೇಳ್ತೆವಿ' ಎಂದಿದ್ದಾರೆ. ಅಂದರೆ, ಅವರೊಳಗೆ ಜಗಳ ಇದೆ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಜೋಶಿ ವ್ಯಂಗ್ಯವಾಡಿದರು.&lt;/p&gt;&lt;h3&gt;ನಿಮ್ಮ ಜಗಳ ಬಗೆಹರಿಸಿಕೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ:&lt;/h3&gt;&lt;p&gt;ನಿಮ್ಮ ಜಗಳವನ್ನು ಬಗೆಹರಿಸಿಕೊಳ್ಳಿ, ಬೀದಿ ರಂಪ ಮತ್ತು ಹಾದಿ ರಂಪ ಮಾಡಬೇಡಿ. ರಸ್ತೆಗಳ ಪರಿಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಗಳಲ್ಲಿ ಔಷಧಿ ಸಿಗುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಒಳಜಗಳದ ಪರಿಣಾಮ ಇದಕ್ಕಿಂತ ದೊಡ್ಡ ಉದಾಹರಣೆ ಬೇರೆ ಬೇಕಿಲ್ಲ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ರೈತರು ಹೋರಾಟ ಮಾಡುತ್ತಿದ್ದಾರೆ, ಜನ ಆಂದೋಲನ ಮಾಡುತ್ತಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿ, ಇಲ್ಲದಿದ್ದರೆ ಬಿಟ್ಟು ಹೋಗಿ. ಈಗಾಗಲೇ ರಾಜಣ್ಣ ಅವರು ವಿಧಾನಸಭಾ ವಿಸರ್ಜನೆ ಮಾಡಿ ಚುನಾವಣೆಗೆ ಬನ್ನಿ ಎಂದಿದ್ದಾರೆ. ನಾವು ಕೂಡ ಒತ್ತಾಯ ಮಾಡುತ್ತೇವೆ; ಸರ್ಕಾರ ನಡೆಸಲು ಆಗದಿದ್ದರೆ ಚುನಾವಣೆಗೆ ಬನ್ನಿ ಎಂದು ಕೇಂದ್ರ ಸಚಿವರು ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದರು.&lt;/p&gt;&lt;p&gt;&lt;strong&gt;ನಕಲಿ ಗಾಂಧಿಗಳ ನಡುವೆ ಖರ್ಗೆ ಹೆಲ್ಪ್&zwnj;ಲೆಸ್:&lt;/strong&gt;&lt;/p&gt;&lt;p&gt;ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸೈಲೆಂಟ್ ಮತ್ತು ಗೊಂದಲಮಯ ನಡವಳಿಕೆಯ ಬಗ್ಗೆಯೂ ಪ್ರಹ್ಲಾದ್ ಜೋಶಿ ಟೀಕಾ ಪ್ರಹಾರ ನಡೆಸಿದರು. ರಾಹುಲ್ ಗಾಂಧಿ ಅವರಿಗೆ ಯಾವುದೇ ಕಂಟ್ರೋಲ್ ಇಲ್ಲ. ಬಿಹಾರ ಚುನಾವಣೆ ಆದ ಮೇಲೆ ನಾಪತ್ತೆಯಾಗಿದ್ದರು, ಚುನಾವಣೆಗೂ ಮುನ್ನ ಎರಡು ದಿನ ನಾಪತ್ತೆಯಾಗಿದ್ದರು. ಎಲ್ಲಿ ಹೋಗಿದ್ದರು ಗೊತ್ತಿಲ್ಲ. ಅವರಿಗೆ ಏನು ಮಾಡಬೇಕು ಅಂತಾ ತೋಚುತ್ತಿಲ್ಲ, ರಾಹುಲ್ ಗಾಂಧಿ, ಖರ್ಗೆ ಇಬ್ಬರೂ ಹೆಲ್ಪ್&zwnj;ಲೆಸ್ ಆಗಿದ್ದಾರೆ. ಸಿದ್ದರಾಮಯ್ಯ ನನ್ನ ಮಾತು ಕೇಳ್ತಾರಾ ಅನ್ನೋ ಗೊಂದಲದಲ್ಲಿ ರಾಹುಲ್ ಇದ್ದಾರೆ, ಡಿ.ಕೆ. ಶಿವಕುಮಾರ್&zwnj;ಗೆ ಹೇಳೋಕೂ ಆಗ್ತಿಲ್ಲ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;ಇಂದಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಅಂತಾ ಯಾಕೆ ಹೇಳಲಿಲ್ಲ? ನಾನು ಕೆಪಿಸಿಸಿ ಅಧ್ಯಕ್ಷ ಅಂತಾ ಡಿಕೆ ಶಿವಕುಮಾರ್ ಯಾಕೆ ಹೇಳಲಿಲ್ಲ? ಒಳಗೆ ಏನೋ ಇದೆ. ಹೀಗಾಗಿ ಹೈಕಮಾಂಡ್ ಹೇಳಿದ ಹಾಗೇ ಕೇಳ್ತೆವಿ ಅಂದಿದ್ದಾರೆ ಎಂದು ಆಂತರಿಕ ಜಗಳದ ಕುರಿತು ಮತ್ತಷ್ಟು ಅನುಮಾನಗಳನ್ನು ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;'ಯಾವುದೇ ಕಾರಣಕ್ಕೂ ಕೈ ಜೋಡಿಸುವುದಿಲ್ಲ:&lt;/strong&gt;&lt;/p&gt;&lt;p&gt;ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದರೆ ಸರ್ಕಾರ ರಚನೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಯಾವುದೇ ಕಾರಣಕ್ಕೂ ನಾವು ಕೈ ಜೋಡಿಸುವುದಿಲ್ಲ. ಹೋರಾಟ ಮಾಡುತ್ತೇವೆ, ಸರಿಯಾಗಿ ಆಡಳಿತ ನಡೆಸಿ ಅಂತಾ ಹೇಳ್ತಿವಿ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಯಾರು ಮುಂದುವರೆಯುತ್ತಾರೆ ಎಂಬ ಪ್ರಶ್ನೆಗೆ, ರಾಹುಲ್ ಗಾಂಧಿಯವರಿಗೆ ಗೊತ್ತಿಲ್ಲ, ನನಗೆ ಹೇಗೆ ಗೊತ್ತಿರಬೇಕು? ಎಂದು ವ್ಯಂಗ್ಯವಾಗಿ ಉತ್ತರಿಸಿದರು.&lt;/p&gt;]]></content:encoded>
            <category>dharwad</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/union-minister-pralhad-joshi-attacks-karnataka-congress-at-hubballi/articleshow-zule7gg"/>
        </item>
        <item>
            <title><![CDATA[ಈ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ: ಜಿಲ್ಲಾಧಿಕಾರಿ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/dharwad-red-alert-heavy-rain-and-flood-warning-issued-gvd/articleshow-3qnzwx3</link>
            <guid isPermaLink="true">https://kannada.asianetnews.com/karnataka-districts/dharwad-red-alert-heavy-rain-and-flood-warning-issued-gvd/articleshow-3qnzwx3</guid>
            <pubDate>Mon, 08 Jun 2026 18:24:50 +0530</pubDate>
            <description><![CDATA[&lt;p&gt;ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktkms6exmjvk9kwy2585zvq6,imgname-chc-1780923275741.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ&lt;/strong&gt;&lt;/p&gt;&lt;p&gt;&lt;strong&gt;ಧಾರವಾಡ (ಜೂ.08):&lt;/strong&gt; ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಮುಂದಿನ ಮೂರು ದಿನಗಳವರೆಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ಹಾಗೂ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಅಚ್ಚು-ಕಟ್ಟು ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;&lt;p&gt;ಈ ಕುರಿತು ಪ್ರಕಟಣೆ ನೀಡಿರುವ ಅವರು ಭಾರಿ ಮಳೆಯಿಂದ ನೀರಿನ ಮಟ್ಟದಲ್ಲಿನ ಏರಿಕೆಯಾಗಿ ಪ್ರವಾಹ ಉಂಟಾಗುವ ಸಾಧ್ಯತೆ ಇರುತ್ತದೆ ಇದರಿಂದ ಬೆಣ್ಣಿಹಳ್ಳ ಮತ್ತು ತುಪ್ಪರಿ ಹಳ್ಳಗಳಲ್ಲಿ, ನಗರ ಪ್ರದೇಶ ತಗ್ಗು ಪ್ರದೇಶಗಳಲ್ಲಿ, ಕಲ್ಲಿನ ಕ್ವಾರಿಗಳು, ಕಾಲುವೆಗಳು, ಕೃಷಿ ಹೊಂಡಗಳು, ತುಂಬಿ ಹರಿಯುವ ಚರಂಡಿಗಳು ಮತ್ತು ಪ್ರವಾಹ ಪೀಡಿತ ಪ್ರದೇಶಗಳ ಬಳಿ ಆಟವಾಡುವುದು ಈಜುವುದು ಮತ್ತು ಸಂಚರಿಸಬಾರದು ಎಂದು ತಿಳಿಸಿದ್ದಾರೆ.&lt;/p&gt;&lt;p&gt;ಭಾರಿ ಮಳೆಯಿಂದಾಗಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳಗಳಲ್ಲಿ ನೀರಿನ ಹೆಚ್ಚಿನ ಹರಿವಿನಿಂದ ಮುಳುಗಿರುವ ಸೇತುವೆ, ಮೇಲ್ಮಟ್ಟದಲ್ಲಿ ಹರಿಯುವ ಕಲ್ವರ್ಟಗಳನ್ನು ದಾಟಲು ಪ್ರಯತ್ನಿಸಬಾರದು ಜನ-ಜಾನುರುಗಳು ನೀರಿನ ಸೆಳೆತಕ್ಕೆ ಸಿಲುಕುವ ಸಾಧ್ಯತೆಗಳಿರುವದರಿಂದ ಎಚ್ಚರಿಕೆ ವಹಿಸಬೇಕು ಹಳ್ಳ-ಕೊಳ್ಳಗಳು, ಜಲಪಾತಗಳು, ಕೆರೆಗಳು, ಕೃಷಿ ಹೊಂಡಗಳು ಅಪಾಯ ಮಟ್ಟಕ್ಕಿಂತ ಹೆಚ್ಚಾಗಿ ನೀರು ಸಂಗ್ರಹವಿರುವ ಸ್ಥಳಗಳ ಹತ್ತಿರ ಸಾರ್ವಜನಿಕರು ಸೆಲ್ಪಿ ಅಥವಾ ಪೋಟೋಗಳನ್ನು ತೆಗೆಯಲು ಹೋಗಬಾರದು ಎಂದು ತಿಳಿಸಿದ್ದಾರೆ&lt;/p&gt;&lt;p&gt;ವಿಶೇಷವಾಗಿ ಜಲ ಮೂಲಗಳು ತಗ್ಗು ಪ್ರದೇಶದಲ್ಲಿ ಮತ್ತು ಪ್ರವಾಹ ಪೀಡಿತ ಜನವಸತಿ ಪ್ರದೇಶಗಳಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿವಹಿಸಬೇಕು ಪ್ರವಾಹ ಸಂದರ್ಭಗಳಲ್ಲಿ ಶಿಥಿಲಗೊಂಡ ಸೇತುವೆಗಳು ಅದೃಶ್ಯ ತೆರೆದ ಮ್ಯಾನ್&zwj;ಹೋಲ್&zwj;ಗಳು ಹಾನಿಗೊಂಡ ರಸ್ತೆಗಳ ಮುಖಾಂತರ ಸಂಚರಿಸಬಾರದು. ಈ ಪ್ರದೇಶದಲ್ಲಿ ನೀರಿನ ಸೆಳೆತದಿಂದ ಗಂಭೀರ ಪ್ರಮಾಣದ ಅಪಾಯವನ್ನುಂಟು ಮಾಡಬಹುದು ಆದ್ದರಿಂದ ಪ್ರವಾಹದ ನೀರಿನಲ್ಲಿ ಸಂಚಾರ ಮಾಡಬಾರದು.&lt;/p&gt;&lt;p&gt;ವಿದ್ಯುತ್ ಸಂಪರ್ಕ ಕಲ್ಪಿಸುವ ಸ್ಥಾವರ, ರಚನೆಗಳ ಬಳಿ ನೀರಿನಿಂದ ಆವೃತಗೊಂಡ ಪ್ರದೇಶಗಳು, ಶಿಥಿಲಗೊಂಡ, ಮುರಿದು ಬಿದ್ದ ವಿದ್ಯುತ್ ಕಂಬಗಳು, ಕಡಿತಗೊಂಡ ವಿದ್ಯುತ್ ತಂತಿಗಳನ್ನು ಮುಟ್ಟಬಾರದು. ಮತ್ತು ಸಮೀಪಕ್ಕೆ ತೆರಳದಂತೆ ಹಾಗೂ ವಿದ್ಯುತ್ ಕಂಬಗಳಿಗೆ ಜಾನುವಾರುಗಳನ್ನು ಕಟ್ಟಬಾರದು ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂದರ್ಭವಿರುತ್ತದೆ ಹಾಗೂ ಶಿಥಿಲಾವಸ್ಥೆಯಲ್ಲಿ ಮರಗಳು ಬೀಳುವ ಸಂಭವವಿರುತ್ತವೆ ಇದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುವುದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ದೃಷ್ಠಿಯಿಂದ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ&lt;/strong&gt;&lt;/h2&gt;&lt;p&gt;ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ: 0836-2445508 ಮತ್ತು 1077 ಧಾರವಾಡ ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಸಂಖ್ಯೆ :0836-2233860, ಹುಬ್ಬಳ್ಳಿ ನಗರ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 0836-2358035, ಅಳ್ನಾವರ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 0836-2385544, ನವಲಗುಂದ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 08380-229240, ಕುಂದಗೋಳ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 08304-290239, ಹುಬ್ಬಳ್ಳಿ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 0836-22338449, ಧಾರವಾಡ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 0836-2233822, ಕಲಘಟಗಿ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 08370-284535, ಅಣ್ಣಿಗೇರಿ ತಹಶೀಲ್ದಾರ ಕಾರ್ಯಾಲಯ ಸಂಖ್ಯೆ : 9482151566, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಯಾಲಯದ ಸಂಖ್ಯೆ : 0836-2213869 ಗಳಿಗೆ ತುರ್ತು ಸಂದರ್ಭದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dharwad-red-alert-heavy-rain-and-flood-warning-issued-gvd/articleshow-3qnzwx3"/>
        </item>
        <item>
            <title><![CDATA[ಶ್ರೀರಾಮ ದಶರಥನ ಮಗನಲ್ಲ ಪುರೋಹಿತರಿಗೆ ಹುಟ್ಟಿದವನು! ಸಾಹಿತಿ ಭಗವಾನ್ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ]]></title>
            <link>https://kannada.asianetnews.com/karnataka-districts/author-ks-bhagwan-faces-firs-across-karnataka-over-lord-ram-remarks-gdp/articleshow-3vuhh6n</link>
            <guid isPermaLink="true">https://kannada.asianetnews.com/karnataka-districts/author-ks-bhagwan-faces-firs-across-karnataka-over-lord-ram-remarks-gdp/articleshow-3vuhh6n</guid>
            <pubDate>Sat, 13 Jun 2026 11:05:20 +0530</pubDate>
            <description><![CDATA[ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮನು ದಶರಥನ ಮಗನಲ್ಲ, ಪುರೋಹಿತರಿಗೆ ಹುಟ್ಟಿದವನು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ, ರಾಜ್ಯದ ಹಲವೆಡೆ ಅವರ ವಿರುದ್ಧ ದೂರು ದಾಖಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01gqcv1zavtzyevhvy8vth06h9,imgname-KS-Bhagwan-1674394533209.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು: &lt;/strong&gt;ಶ್ರೀರಾಮನು ರಾಜ ದಶರಥನ ಮಗನೇ ಅಲ್ಲ. ಎಂದು ಹೇಳಿಕೆ ನೀಡಿರುವ ಸಾಹಿತಿ ಪ್ರೊ. ಕೆ.ಎಸ್. ಭಗವಾನ್&zwnj; ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ದೂರುದಾಖಲಾಗಿದೆ.&lt;/p&gt;&lt;p&gt;ಇದೀಗ ಕೆಎಸ್ ಭಗವಾನ್ ವಿರುದ್ಧ ಸಿ. ಕೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿಸಿದ) ಜೂ.9ರಂದು ಹರಿಹರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಹಬ್ಬ-2026 ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈಸೂರಿನ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.&lt;/p&gt;&lt;p&gt;ಶ್ರೀರಾಮನು ದಶರಥನ ಮಗನಲ್ಲ. ತಂದೆ ದಶರಥನಿಗೆ ಶ್ರೀರಾಮಚಂದ್ರ ಹುಟ್ಟಿದವನಲ್ಲ. ಪುತ್ರಕಾಮೆಷ್ಟಿಯಾಗದಲ್ಲಿ ರಾಣಿಯರು ಪುರೋಹಿತರ ಜೊತೆ ಮಲಗಬೇಕಿತ್ತು. ಶ್ರಿರಾಮನು ಪುರೋಹಿತರಿಗೆ ಹುಟ್ಟಿದವನು ಎಂದಿದ್ದಾರೆ. ಹಿಂದೂ ದೇವರಿಗೆ ಪೂಜೆ ಮಾಡಬಾರದು ಎಂದು ಹೇಳಿಕೆ ನೀಡಿದ್ದಾರೆ.ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಹೇಳಿಕೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಈ ಹಿಂದೆಯೂ ಭಗವಾನ್, ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಮತ್ತದೆ ರೀತಿಯ ಹೇಳಿಕೆಗಳನ್ನು ನೀಡಿದ್ದು, ಧಾರ್ಮಿಕ ಭಾವನೆಗೆ ಉದ್ದೇಶಪೂರ್ವಾಗಿ ಧಕ್ಕೆ ತರಲು ಮಾಡಿರುವ ಪ್ರಯತ್ನವಿದು. ಆದ್ದರಿಂದ ಅವರ ವಿರುದ್ಧ ಕಾನೂನು ವಿಧಿಗಳ ಅಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಚ್ ಎಂ ಸುರೇಶ್ ಎನ್ನುವವರು ದೂರು ನೀಡಿದ್ದಾರೆ.&lt;/p&gt;&lt;h2&gt;ಧಾರವಾಡದಲ್ಲೂ ದೂರು ದಾಖಲು&lt;/h2&gt;&lt;p&gt;ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್&zwnj;, ಕರ್ನಾಟಕ ರಾಜ್ಯ ಕ್ಷತ್ರಿಯ ಯುವ ಬ್ರಿಗೇಡ್ ರಾಜ್ಯ ಕಾರ್ಯದರ್ಶಿ ಸಂತೋಷ ಪೂಜಾರ ಸೇರಿದಂತೆ ಹಲವರು ಖಂಡಿಸಿದ್ದಾರೆ. ಇನ್ನು ಸಾಹಿತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಸೇನಾ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಧಾರವಾಡದ ಶಹರ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಒಂದು ವಾರದಲ್ಲಿ ಬಂಧಿಸದೆ ಹೋದಲ್ಲಿ ಮೈಸೂರಿನ ಅವರ ಮನೆ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/author-ks-bhagwan-faces-firs-across-karnataka-over-lord-ram-remarks-gdp/articleshow-3vuhh6n"/>
        </item>
        <item>
            <title><![CDATA[ಹುಬ್ಬಳ್ಳಿ Chennamma Circle ಫ್ಲೈಓವರ್ ಇಡೀ ಕಾಮಗಾರಿಯೇ ಕಳಪೆ: ಎಂಜಿನಿಯರ್‌ ತಂಡದಿಂದ ದೂರು]]></title>
            <link>https://kannada.asianetnews.com/karnataka-districts/hubballi-chennamma-circle-flyover-construction-quality-issues-ici-report-san/articleshow-4reuuii</link>
            <guid isPermaLink="true">https://kannada.asianetnews.com/karnataka-districts/hubballi-chennamma-circle-flyover-construction-quality-issues-ici-report-san/articleshow-4reuuii</guid>
            <pubDate>Tue, 23 Jun 2026 13:06:19 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯಲ್ಲಿ ಗಂಭೀರ ತಾಂತ್ರಿಕ ಲೋಪಗಳನ್ನು 'ಇಂಡಿಯನ್ ಕಾಂಕ್ರೀಟ್ ಇನ್&zwnj;ಸ್ಟಿಟ್ಯೂಟ್' ತಜ್ಞರು ಪತ್ತೆಹಚ್ಚಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvsp9xftxmdxqnsar8bchdfb,imgname-hubballi-chennamma-circle-flyover-1782199940602.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜೂ.23): &lt;/strong&gt;ಇಲ್ಲಿನ ಪ್ರಮುಖ ಕೇಂದ್ರವಾಗಿರುವ ಕಿತ್ತೂರು ಚೆನ್ನಮ್ಮ ವೃತ್ತ (ರಾಣಿ ಚೆನ್ನಮ್ಮ ವೃತ್ತ) ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಫ್ಲೈಓವರ್ (ಮೇಲ್ಸೇತುವೆ) ಕಾಮಗಾರಿಯ ಗುಣಮಟ್ಟದ ಕುರಿತು ತಾಂತ್ರಿಕ ತಜ್ಞರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. 'ಇಂಡಿಯನ್ ಕಾಂಕ್ರೀಟ್ ಇನ್&zwnj;ಸ್ಟಿಟ್ಯೂಟ್' (ICI) ಹುಬ್ಬಳ್ಳಿ-ಧಾರವಾಡ ಕೇಂದ್ರದ ಸದಸ್ಯರು ಕಾಮಗಾರಿಯಲ್ಲಿ ಹಲವು ತಾಂತ್ರಿಕ ಲೋಪದೋಷಗಳನ್ನು ಪತ್ತೆಹಚ್ಚಿದ್ದಾರೆ.&lt;/p&gt;&lt;p&gt;ಸೋಮವಾರದಂದು ಫ್ಲೈಓವರ್ ನಿರ್ಮಾಣ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಂಜಿನಿಯರ್&zwnj;ಗಳ ತಂಡ, ಕಾಮಗಾರಿಯ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮತ್ತು ಆಮೆಗತಿಯಲ್ಲಿ ಸಾಗುತ್ತಿರುವ ಕೆಲಸಕ್ಕೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈ ಕುರಿತು ತಾವು ಗುರುತಿಸಿರುವ ಲೋಪದೋಷಗಳ ಸವಿಸ್ತಾರ ವರದಿಯನ್ನು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ತಜ್ಞರು ನಿರ್ಧರಿಸಿದ್ದಾರೆ.&lt;/p&gt;&lt;h2&gt;&lt;strong&gt;2 ವರ್ಷಗಳಿಂದ ತುಕ್ಕು ಹಿಡಿಯುತ್ತಿದೆ ಕಬ್ಬಿಣ!&lt;/strong&gt;&lt;/h2&gt;&lt;p&gt;ಐಸಿಐ ಹುಬ್ಬಳ್ಳಿ-ಧಾರವಾಡ ಕೇಂದ್ರದ ಅಧ್ಯಕ್ಷ ಸುರೇಶ್ ಕಿರೇಸೂರ್ ಹಾಗೂ ಹುಬ್ಬಳ್ಳಿ ಕೇಂದ್ರದ ಅಧ್ಯಕ್ಷ ಉಲಿವೆಪ್ಪ ಸುಣಗಾರ್ ನೇತೃತ್ವದಲ್ಲಿ ಎಂಜಿನಿಯರ್&zwnj;ಗಳು ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ, ಫ್ಲೈಓವರ್ ನಿರ್ಮಾಣಕ್ಕೆ ಬಳಸಲಾಗಿರುವ ಕಬ್ಬಿಣದ ಸರಳುಗಳು ದೀರ್ಘಕಾಲದಿಂದ ಮಳೆ ಮತ್ತು ಗಾಳಿಗೆ ತೆರೆದುಕೊಂಡಿರುವುದರಿಂದ ಸಂಪೂರ್ಣವಾಗಿ ತುಕ್ಕು ಹಿಡಿದಿರುವುದನ್ನು ಕಂಡುಹಿಡಿದರು.&lt;/p&gt;&lt;p&gt;ಸಾಮಾನ್ಯವಾಗಿ ಯಾವುದೇ ನಿರ್ಮಾಣದ ಕಬ್ಬಿಣವನ್ನು ಎರಡು ತಿಂಗಳಿಗಿಂತ ಹೆಚ್ಚು ಕಾಲ ಮಳೆ-ಗಾಳಿಗೆ ಮುಕ್ತವಾಗಿ ಬಿಡಬಾರದು. ಹಾಗೆ ಬಿಟ್ಟರೆ ತುಕ್ಕು ಹಿಡಿದು ಅದು ತನ್ನ ನಿಜವಾದ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ. ಕಬ್ಬಿಣದ ವ್ಯಾಪಾರಿಗಳು ಸಹ ಇವುಗಳನ್ನು 6 ತಿಂಗಳಿಗಿಂತ ಹೆಚ್ಚು ಕಾಲ ಸಂಗ್ರಹಿಸಿ ಇಡುವುದಿಲ್ಲ. ಆದರೆ, ಈ ಫ್ಲೈಓವರ್&zwnj;ನ ಕೆಲವು ಭಾಗಗಳಲ್ಲಿ ಕಬ್ಬಿಣದ ಸಳುಗಳನ್ನು ಬರೋಬ್ಬರಿ ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲ ಹಾಗೆಯೇ ಬಿಡಲಾಗಿದೆ! ಇದು ಇಡೀ ಫ್ಲೈಓವರ್&zwnj;ನ ಸ್ಥಿರತೆ ಮತ್ತು ಸುರಕ್ಷತೆಗೆ ದೊಡ್ಡ ಧಕ್ಕೆ ತರಬಹುದು. ಆದ್ದರಿಂದ ತಕ್ಷಣ ಇದರ ಗುಣಮಟ್ಟ ತಪಾಸಣೆ ನಡೆಸಲೇಬೇಕಿದೆ ಎಂದಿದ್ದಾರೆ.&lt;/p&gt;&lt;h2&gt;&lt;strong&gt;ಸಾರ್ವಜನಿಕರ ಜೀವಕ್ಕೆ ಗಂಡಾಂತರ; ಸುರಕ್ಷತಾ ಕ್ರಮಗಳೇ ಇಲ್ಲ&lt;/strong&gt;&lt;/h2&gt;&lt;p&gt;ಗುತ್ತಿಗೆದಾರರು ಮತ್ತು ನೋಡಲ್ ಏಜೆನ್ಸಿಯು ಕಾರ್ಮಿಕರ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವ ಬಗ್ಗೆ ತಜ್ಞರ ತಂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಿರ್ಮಾಣ ಪ್ರದೇಶಕ್ಕೆ ಜನರು ಅಥವಾ ವಾಹನಗಳು ನುಗ್ಗದಂತೆ ತಡೆಯಲು ಯಾವುದೇ ಗಟ್ಟಿಮುಟ್ಟಾದ ಬ್ಯಾರಿಕೇಡ್&zwnj;ಗಳನ್ನು ಹಾಕಲಾಗಿಲ್ಲ.&lt;/p&gt;&lt;p&gt;ಕಾಮಗಾರಿ ನಡೆಯುವ ಜಾಗದ ಸುತ್ತ ಅಳವಡಿಸಿರುವ ಸುರಕ್ಷತಾ ನೆಟ್&zwnj;ಗಳು (ಬಲೆಗಳು) ಸಮರ್ಪಕವಾಗಿಲ್ಲ. ಇದರಿಂದಾಗಿ ಸಾರ್ವಜನಿಕರು ಮತ್ತು ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ನಿರ್ಮಾಣ ಹಂತದ ಸೇತುವೆಯ ಕೆಳಗಡೆಯೇ ಓಡಾಡುವಂತಾಗಿದೆ. ಸರಿಯಾದ ಟ್ರಾಫಿಕ್ ಡೈವರ್ಷನ್ (ಸಂಚಾರ ಮಾರ್ಗ ಬದಲಾವಣೆ) ಅಥವಾ ಎಚ್ಚರಿಕೆ ಫಲಕಗಳನ್ನು ಹಾಕದ ಕಾರಣ ಈಗಾಗಲೇ ಇಲ್ಲಿ ಒಂದೆರಡು ಅಪಘಾತಗಳು ಸಂಭವಿಸಿದ್ದು, ಒಬ್ಬರು ಜೀವ ಕಳೆದುಕೊಂಡಿದ್ದಾರೆ. ಹೀಗಾಗಿ, ನಿರಂತರ ವಾಹನ ದಟ್ಟಣೆ ಇರುವ ಚೆನ್ನಮ್ಮ ವೃತ್ತದಲ್ಲಿ ತಕ್ಷಣವೇ ಬ್ಯಾರಿಕೇಡ್&zwnj;ಗಳನ್ನು ಅಳವಡಿಸಿ, ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಂಡ ಎಚ್ಚರಿಸಿದೆ.&lt;/p&gt;&lt;h2&gt;&lt;strong&gt;5 ವರ್ಷವಾದ್ರೂ ಮುಗಿಯದ ಕೆಲಸ; ಸರ್ಕಾರಕ್ಕೆ ದೂರು&lt;/strong&gt;&lt;/h2&gt;&lt;p&gt;ಐಸಿಐ ಹುಬ್ಬಳ್ಳಿ-ಧಾರವಾಡ ಕೇಂದ್ರದ ಅಧ್ಯಕ್ಷ ಸುರೇಶ್ ಕಿರೇಸೂರ್ ಮಾತನಾಡಿ, &quot;ಈ ಫ್ಲೈಓವರ್ ಕಾಮಗಾರಿ ಆರಂಭವಾಗಿದ್ದು 2021 ರಲ್ಲಿ. ಆದರೆ 5 ವರ್ಷ ಕಳೆದರೂ ಇನ್ನೂ ಕೆಲಸ ಮುಗಿದಿಲ್ಲ. ಗುತ್ತಿಗೆದಾರರು ಈಗಾಗಲೇ ಹಲವು ಡೆಡ್&zwnj;ಲೈನ್&zwnj;ಗಳನ್ನು ಮಿಸ್ ಮಾಡಿದ್ದಾರೆ. ಸದ್ಯ ಅವರೇ ಹಾಕಿಕೊಂಡಿರುವ ಡಿಸೆಂಬರ್ ಅವಧಿಯೊಳಗೂ ಈ ಕೆಲಸ ಮುಗಿಯುವ ಲಕ್ಷಣ ಕಾಣುತ್ತಿಲ್ಲ&quot; ಎಂದು ಬೇಸರ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳು ನಿಯಮಿತವಾಗಿ ಸ್ಥಳಕ್ಕೆ ಭೇಟಿ ನೀಡಿ ನಿಗಾ ವಹಿಸಬೇಕು ಎಂದಿದ್ದಾರೆ.&lt;/p&gt;&lt;p&gt;&quot;ನಾವು ಸಿದ್ಧಪಡಿಸಿರುವ ಈ ತಾಂತ್ರಿಕ ವರದಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶೀಘ್ರದಲ್ಲೇ ಕಳುಹಿಸಿಕೊಡಲಿದ್ದೇವೆ&quot; ಎಂದು ಸುರೇಶ್ ಕಿರೇಸೂರ್ ತಿಳಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/hubballi-chennamma-circle-flyover-construction-quality-issues-ici-report-san/articleshow-4reuuii"/>
        </item>
        <item>
            <title><![CDATA[Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!]]></title>
            <link>https://kannada.asianetnews.com/karnataka-districts/dharwad-love-jihad-case-minor-girl-death-bajrang-dal-protests-case-file-against-hindu-leader/articleshow-612mtpd</link>
            <guid isPermaLink="true">https://kannada.asianetnews.com/karnataka-districts/dharwad-love-jihad-case-minor-girl-death-bajrang-dal-protests-case-file-against-hindu-leader/articleshow-612mtpd</guid>
            <pubDate>Sun, 14 Jun 2026 14:47:16 +0530</pubDate>
            <description><![CDATA[ಧಾರವಾಡದ ಗರಗ ಗ್ರಾಮದಲ್ಲಿ 'ಲವ್ ಜಿಹಾದ್'ಗೆ ಅಪ್ರಾಪ್ತ ದಲಿತ ಬಾಲಕಿ ಬಲಿಯಾಗಿದ್ದಾಳೆಂಬ ಆರೋಪದಡಿ ತೀವ್ರ ಪ್ರತಿಭಟನೆ ನಡೆದಿದೆ. ಬಜರಂಗದಳದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ನ್ಯಾಯ ಕೇಳಿದ ಹಿಂದೂ ಮುಖಂಡನ ಮೇಲೆಯೇ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv2pnd6yccw2f3c6w5c2qc1m,imgname-dharwad-love-jihad-case-1781428565213.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ (ಜೂ.14): ಧಾ&lt;/strong&gt;ರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಅಪ್ರಾಪ್ತ ದಲಿತ ಬಾಲಕಿಯೊಬ್ಬಳು 'ಲವ್ ಜಿಹಾದ್' ಕಾಟಕ್ಕೆ ಹೆದರಿ ಸಾವಿಗೆ ಶರಣಾಗಿರುವ ಘಟನೆ ಈಗ ಜಿಲ್ಲೆಯಲ್ಲಿ ಭಾರಿ ರಾಜಕೀಯ ಹಾಗೂ ಸಾಮಾಜಿಕ ಸಂಚಲನ ಮೂಡಿಸಿದೆ. ಈ ಘಟನೆಯನ್ನು ಖಂಡಿಸಿ ಗರಗ ಗ್ರಾಮದಲ್ಲಿ ಬಜರಂಗದಳ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ದಾಳಿ ನಡೆದಿದೆ.&lt;/p&gt;&lt;h3&gt;&lt;strong&gt;ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ!&lt;/strong&gt;&lt;/h3&gt;&lt;p&gt;ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಜರಂಗದಳದ ಪ್ರಮುಖ ಕಾರ್ಯಕರ್ತ ಹಾಗೂ ಹಿಂದೂ ಮುಖಂಡ ಶಿವಾನಂದ ಸತ್ತಿಗೇರಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. 'ಒಬ್ಬ ದಲಿತ ಹೆಣ್ಣು ಮಗಳಿಗೆ ಇಷ್ಟೊಂದು ಅನ್ಯಾಯವಾಗಿದ್ದರೂ, ದಲಿತರ ಪರ ಎಂದು ಹೇಳಿಕೊಳ್ಳುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಎಲ್ಲಿದ್ದಾರೆ?' ಎಂದು ಏಕವಚನದಲ್ಲೇ ಪ್ರಶ್ನಿಸಿ ಕಿಡಿಕಾರಿದರು. ಬಾಲಕಿಯ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಸರ್ಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಸತ್ತಿಗೇರಿ, 'ಸಂತ್ರಸ್ತ ಅಪ್ರಾಪ್ತೆ ಬಾಲಕಿಯ ಕುಟುಂಬಕ್ಕೆ ಸರ್ಕಾರ ತಕ್ಷಣವೇ 25 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಬೇಕು' ಎಂದು ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ಗರಗ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಎಚ್ಚರಿಕೆ!&lt;/strong&gt;&lt;/h2&gt;&lt;p&gt;ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಶಿವಾನಂದ ಸತ್ತಿಗೇರಿ ಅವರು ಪೊಲೀಸರ ಕಾರ್ಯವೈಖರಿ ವಿರುದ್ಧ ಆಕ್ರೋಶದ ಜ್ವಾಲೆ ಉಗುಳಿದರು. 'ಇನ್ನು ಮುಂದೆ ಗರಗ ಪೊಲೀಸರು ಇದೇ ರೀತಿ ಅಸಡ್ಡೆಯಿಂದ ನಡೆದುಕೊಂಡರೆ, ನಾವು ಗರಗ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಬೇಕಾಗುತ್ತದೆ' ಎಂದು ನೇರವಾಗಿಯೇ ಎಚ್ಚರಿಕೆ ನೀಡಿದರು.&lt;/p&gt;&lt;h2&gt;&lt;strong&gt;ಪ್ರತಿಭಟಿಸಿದ ಮುಖಂಡನ ಮೇಲೆಯೇ ಅಟ್ರಾಸಿಟಿ ಕೇಸ್ ಅಸ್ತ್ರ?&lt;/strong&gt;&lt;/h2&gt;&lt;p&gt;ಮತ್ತೊಂದೆಡೆ, ಬಾಲಕಿಯ ಸಾವಿಗೆ ನ್ಯಾಯ ಕೇಳಿ ಪ್ರತಿಭಟನೆ ನಡೆಸಿದ ಹಿಂದೂ ಮುಖಂಡನ ಮೇಲೆಯೇ ಇದೀಗ ಅಟ್ರಾಸಿಟಿ ಕಾಯ್ದೆಯಡಿ (SC/ST Act) ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕ್ರಮವು ಪ್ರತಿಭಟನಾಕಾರರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. 'ನ್ಯಾಯ ಕೇಳಲು ಹೋದವರ ಧ್ವನಿ ಅಡಗಿಸಲು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ' ಎಂದು ಬಜರಂಗದಳದ ಕಾರ್ಯಕರ್ತರು ಆಪಾದಿಸಿದ್ದಾರೆ.&lt;/p&gt;&lt;p&gt;ಸದ್ಯ ಗರಗ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/dharwad-love-jihad-case-minor-girl-death-bajrang-dal-protests-case-file-against-hindu-leader/articleshow-612mtpd"/>
        </item>
        <item>
            <title><![CDATA[Hubballi: 40 ಕ್ಷೇತ್ರಗಳಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಚೇತನ್ ಅಹಿಂಸಾ ಕಾರ್ಯಾಚರಣೆ: ಅಸಲಿ ಪ್ಲಾನ್ ಏನು?]]></title>
            <link>https://kannada.asianetnews.com/karnataka-districts/chethan-ahimsa-new-political-party-2028-karnataka-election-gvd/articleshow-9zccu9i</link>
            <guid isPermaLink="true">https://kannada.asianetnews.com/karnataka-districts/chethan-ahimsa-new-political-party-2028-karnataka-election-gvd/articleshow-9zccu9i</guid>
            <pubDate>Tue, 16 Jun 2026 22:57:51 +0530</pubDate>
            <description><![CDATA[&lt;p&gt;Chethan Ahimsa: ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಲು ಬಲಿಷ್ಠ ಪ್ರಾದೇಶಿಕ ಧ್ವನಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪರ&zwj;್ಯಾಯ ಪಕ್ಷ ಕಟ್ಟಲು ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಚೇತನ್ ಅಹಿಂಸಾ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jkr11w3f2tnpvsx05cr2c392,imgname-actor-chetan-ahimsa.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜೂ.16):&lt;/strong&gt; ಉತ್ತರ ಕರ್ನಾಟಕ ಭಾಗಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಲು ಬಲಿಷ್ಠ ಪ್ರಾದೇಶಿಕ ಧ್ವನಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪರ&zwj;್ಯಾಯ ಪಕ್ಷ ಕಟ್ಟಲು ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಚಿತ್ರನಟ ಚೇತನ್ ಅಹಿಂಸಾ ಹೇಳಿದರು.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನಾಭಿಪ್ರಾಯ ಸಂಗ್ರಹ ಹಾಗೂ ಸಂಘಟನೆ ಬಲವರ್ಧನೆ ಕಾರ್ಯ ನಡೆಯುತ್ತಿದೆ. ರಾಜ್ಯದ ಸುಮಾರು 40 ಕ್ಷೇತ್ರಗಳಲ್ಲಿ ಪರ&zwj;್ಯಾಯ ರಾಜಕೀಯ ಶಕ್ತಿ ಕಟ್ಟುವ ನಿಟ್ಟಿನಲ್ಲಿ ಜನರೊಂದಿಗೆ ನೇರ ಸಂವಾದ ನಡೆಸಲಾಗುತ್ತಿದೆ.&lt;/p&gt;&lt;p&gt;ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ ಹಾಗೂ ಆರ್ಥಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮೂಲಭೂತ ಬದಲಾವಣೆ ಅಗತ್ಯವಿದೆ. ಅಂಬೇಡ್ಕರ್&zwnj; ಸಿದ್ಧಾಂತಗಳ ಆಧಾರದ ಮೇಲೆ ಜನಪರ ರಾಜಕೀಯ ವ್ಯವಸ್ಥೆ ನಿರ್ಮಾಣವಾಗಬೇಕಿದ್ದು, ಭ್ರಷ್ಟಾಚಾರ ರಹಿತ ಆಡಳಿತವೇ ಗುರಿಯಾಗಿದೆ ಎಂದರು.&lt;/p&gt;&lt;p&gt;ಹೊಸ ರಾಜಕೀಯ ಪಕ್ಷ ಸ್ಥಾಪನೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಯುತ್ತಿದೆ. ವೈಯಕ್ತಿಕ ನಿರ್ಧಾರ ಕೈಗೊಳ್ಳುವ ಬದಲು ಸಾಮೂಹಿಕ ತೀರ್ಮಾನದ ಆಧಾರದ ಮೇಲೆ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.&lt;/p&gt;&lt;h2&gt;&lt;strong&gt;ಸೂಕ್ಷ್ಮ ವಿಷಯ&lt;/strong&gt;&lt;/h2&gt;&lt;p&gt;ರಾಮಾಯಣ ಮತ್ತು ಲೇಖಕ ಕೆ.ಎಸ್. ಭಗವಾನ್ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿ, ರಾಮಾಯಣವು ಕೇವಲ ಒಂದು ಧರ್ಮದ ವ್ಯಾಪ್ತಿಗೆ ಸೀಮಿತವಾದ ಗ್ರಂಥವಲ್ಲ. ಸಮಾಜದ ವಿವಿಧ ವರ್ಗಗಳ ಭಾವನೆಗಳಿಗೆ ಸಂಬಂಧಿಸಿದ ಸೂಕ್ಷ್ಮ ವಿಷಯ. ಸಾರ್ವಜನಿಕ ವ್ಯಕ್ತಿಗಳು ಸಂವಿಧಾನಾತ್ಮಕ ಹಾಗೂ ಜವಾಬ್ದಾರಿಯುತ ದೃಷ್ಟಿಕೋನದಿಂದ ಮಾತನಾಡಬೇಕು ಎಂದರು.&lt;/p&gt;&lt;p&gt;ಬಿಡದಿ ಪ್ರದೇಶದಲ್ಲಿ ರೈತರ ಭೂಮಿಯನ್ನು ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಚೇತನ್, ರೈತರ ಬದುಕು ಮತ್ತು ಭೂ ಹಕ್ಕು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜಕೀಯ ಮತ್ತು ಆರ್ಥಿಕ ಲಾಭಕ್ಕಾಗಿ ರೈತರ ಜಮೀನು ಕಬಳಿಸುವ ಪ್ರವೃತ್ತಿ ನಿಲ್ಲಬೇಕು.- ಅಹಿಂಸಾ ಚೇತನ, ನಟ&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/chethan-ahimsa-new-political-party-2028-karnataka-election-gvd/articleshow-9zccu9i"/>
        </item>
        <item>
            <title><![CDATA[ಬಿಜೆಪಿ ಎಐ ಸಾಫ್ಟ್‌ವೇರ್‌ ಬಳಸಿ ಮತದಾರರ ಪಟ್ಟಿ ಅಳಿಸುತ್ತಿದೆಯೇ?  ಸಂತೋಷ್ ಲಾಡ್‌ ಗಂಭೀರ ಆರೋಪ!]]></title>
            <link>https://kannada.asianetnews.com/karnataka-districts/is-bjp-deleting-voter-lists-using-ai-software-santosh-lad-makes-serious-allegations-at-hubballi-rav/articleshow-dpllrwc</link>
            <guid isPermaLink="true">https://kannada.asianetnews.com/karnataka-districts/is-bjp-deleting-voter-lists-using-ai-software-santosh-lad-makes-serious-allegations-at-hubballi-rav/articleshow-dpllrwc</guid>
            <pubDate>Fri, 26 Jun 2026 04:39:02 +0530</pubDate>
            <description><![CDATA[&lt;p&gt;ಶಾಸಕ ಸಂತೋಷ ಲಾಡ್, ಮತದಾರರ ಪಟ್ಟಿಯನ್ನು ಆಧಾರ್&zwnj;ಗೆ ಲಿಂಕ್ ಮಾಡುವುದರಿಂದ ನಕಲಿ ಮತದಾರರನ್ನು ತಡೆಯಬಹುದೆಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಬಿಜೆಪಿ ಎಐ ಸಾಫ್ಟ್&zwnj;ವೇರ್&zwnj; ಬಳಸಿ ಕಾಂಗ್ರೆಸ್ ಬೆಂಬಲಿಗರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn4n9wm657f0b59qkxwg9k61,imgname-minister-santosh-lad-1775051797126.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜೂ.26):&lt;/strong&gt; ಮತದಾರರ ಪಟ್ಟಿಯನ್ನು ಆಧಾರ್&zwnj;ಗೆ ಲಿಂಕ್ ಮಾಡಲಿ. ಆಧಾರ್ ವ್ಯವಸ್ಥೆಯಲ್ಲಿ ಬಯೋಮೆಟ್ರಿಕ್ ಮಾಹಿತಿ ಒಳಗೊಂಡಿರುವುದರಿಂದ ನಕಲಿ ಮತದಾರರ ನೋಂದಣಿ ಕಡಿಮೆಯಾಗುತ್ತದೆ. ಈ ಕುರಿತು ದೇಶಾದ್ಯಂತ ಸಾರ್ವಜನಿಕರು ಚರ್ಚಿಸಬೇಕಿದೆ ಎಂದು ಶಾಸಕ ಸಂತೋಷ ಲಾಡ್&zwnj; ಅಭಿಪ್ರಾಯಪಟ್ಟರು.&amp;nbsp;&lt;/p&gt;&lt;h2&gt;ಮತದಾರರ ಪರಿಷ್ಕರಣೆಗೆ ಬಿಜೆಪಿ ವಿಶೇಷ ಸಾಫ್ಟ್&zwnj;ವೇರ್:&lt;/h2&gt;&lt;p&gt;ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಮತದಾರರ ಪರಿಷ್ಕರಣೆಗಾಗಿಯೇ ಒಂದು ವಿಶೇಷ ಎಐ ಸಾಫ್ಟ್&zwnj;ವೇರ್&zwnj; ಸಿದ್ಧಪಡಿಸಿದ್ದಾರೆ. ಅದು ಕಾಂಗ್ರೆಸ್&zwnj; ಬೆಂಬಲಿಗರು ಯಾರೆಂದು ಸಾಮಾಜಿಕ ಜಾಲತಾಣಗಳ ಮಾಹಿತಿ ಪಡೆದು ಸಿದ್ಧಪಡಿಸಿ ಕೊಡುತ್ತದೆ. ಅದನ್ನು ನೋಡಿಕೊಂಡು ಯಾರು ಅವರಿಗೆ ಮತ ಹಾಕುವುದಿಲ್ಲವೋ ಅಂತಹವರನ್ನು ಗುರುತಿಸಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಕಾಂಗ್ರೆಸ್ ಎಲ್ಲ ಶಾಸಕರೂ ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷದ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು ಎಂದರು.&lt;/p&gt;&lt;h3&gt;ರೈತರ ಹೋರಾಟ ಕಾಂಗ್ರೆಸ್ ಗೌರವಿಸುತ್ತೆ:&lt;/h3&gt;&lt;p&gt;ಬಿಡದಿ ಟೌನ್&zwnj;ಶಿಪ್ ಯೋಜನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸರ್ಕಾರ ಯಾವುದೇ ಯೋಜನೆಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ತೀರ್ಮಾನ ಕೈಗೊಳ್ಳುತ್ತದೆ. ರೈತರ ಹೋರಾಟಗಳಿಗೆ ಕಾಂಗ್ರೆಸ್ ಸರ್ಕಾರ ಗೌರವ ನೀಡುತ್ತದೆ. ರೈತರ ಅಭಿಪ್ರಾಯ ಹಾಗೂ ಸಾಧಕ-ಬಾಧಕ ಸರ್ಕಾರ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/is-bjp-deleting-voter-lists-using-ai-software-santosh-lad-makes-serious-allegations-at-hubballi-rav/articleshow-dpllrwc"/>
        </item>
        <item>
            <title><![CDATA[DGP Alok Kumar: ಧಾರವಾಡ ಜೈಲರ್ ಆತ್ಮ*ಹತ್ಯೆ ಪ್ರಕರಣ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಕುಟುಂಬದ ಗಂಭೀರ ಆರೋಪ!]]></title>
            <link>https://kannada.asianetnews.com/state/dharwad-jailer-siddaramappa-dies-family-accuses-dgp-alok-kumar-gdp/articleshow-fzago2g</link>
            <guid isPermaLink="true">https://kannada.asianetnews.com/state/dharwad-jailer-siddaramappa-dies-family-accuses-dgp-alok-kumar-gdp/articleshow-fzago2g</guid>
            <pubDate>Sat, 13 Jun 2026 16:48:54 +0530</pubDate>
            <description><![CDATA[ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ್ ಅವರ ಆತ್ಮಹತ್ಯೆ ಪ್ರಕರಣವು ಹಿರಿಯ ಪೊಲೀಸ್ ಅಧಿಕಾರಿಯತ್ತ ಬೆರಳು ಮಾಡಿದೆ. ಡಿಜಿಪಿ ಅಲೋಕ್ ಕುಮಾರ್ ಅವರ ಮಾನಸಿಕ ಕಿರುಕುಳವೇ ಸಾವಿಗೆ ಕಾರಣ ಎಂದು ಮೃತರ ಕುಟುಂಬ ಆರೋಪಿಸಿದ್ದು, ಅವರ ವಿರುದ್ಧ ದೂರು ದಾಖಲಿಸಲು ಸಜ್ಜಾಗಿದೆ. ಅಮಾನತುಗೊಂಡಿದ್ದ ಸಿದ್ದರಾಮಪ್ಪ, ನಿರಂತರ ಕಿರುಕುಳದಿಂದ ನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪತ್ನಿ ದೂರಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv0b5e97df30cbxx002rtykh,imgname-dgp-alok-kumar-1781349398823.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ:&lt;/strong&gt; ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ್ ಅವರ ಆತ್ಮ*ಹತ್ಯೆ ಪ್ರಕರಣವು ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಭಾರೀ ಆರೋಪ ಕೇಳಿಬಂದಿದೆ. ಜೈಲರ್ ಸಿದ್ದರಾಮಪ್ಪ ಅವರ ಸಾವಿಗೆ ರಾಜ್ಯ ಕಾರಾಗೃಹ ಇಲಾಖೆಯ ಡಿಜಿಪಿ (DGP) ಅಲೋಕ್ ಕುಮಾರ್ ಅವರ ಮಾನಸಿಕ ಕಿರುಕುಳವೇ ನೇರ ಕಾರಣ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಡಿಜಿಪಿ ವಿರುದ್ಧವೇ ಪ್ರಕರಣ ದಾಖಲಿಸಲು ಪತ್ನಿ ಹಾಗೂ ಕುಟುಂಬ ಸಜ್ಜಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಸಿದ್ದರಾಮಪ್ಪ ಅಮಾನತುಗೊಂಡಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಅವರು ಇನ್ನೇನು ಮೈಸೂರಿಗೆ ಹೋಗಿ ವರದಿ ಮಾಡಿಕೊಳ್ಳಬೇಕಿತ್ತು, ಅಷ್ಟರಲ್ಲಿ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ.&lt;/p&gt;&lt;h2&gt;ಆರೋಪವೇನು?&lt;/h2&gt;&lt;p&gt;ಜೈಲರ್ ಸಿದ್ದರಾಮಪ್ಪ ಅವರ ನಿಗೂಢ ಆತ್ಮ*ಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಲಕ್ಷ್ಮಿ ಅವರು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಇಲಾಖಾ ವಿಚಾರಣೆಯ ನೆಪದಲ್ಲಿ ಕಳೆದ ಎರಡು ತಿಂಗಳ ಹಿಂದೆ ಪತಿ ಸಿದ್ದರಾಮಪ್ಪ ಅವರನ್ನು ಸೇವೆಯಿಂದ ಅಮಾನತು (Suspend) ಮಾಡಲಾಗಿತ್ತು. ಇಲಾಖೆಯ ಈ ಕ್ರಮದಿಂದ ಅವರು ತೀವ್ರವಾಗಿ ನೊಂದಿದ್ದರು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂಬುದು ಕುಟುಂಬದ ವಾದ. ಜೂನ್ 12 ರಂದು ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಇರುವ ಕಾರಾಗೃಹ ಸಿಬ್ಬಂದಿ ವಸತಿಗೃಹದ ಮನೆಯಲ್ಲಿ ಸಿದ್ದರಾಮಪ್ಪ ಶವವಾಗಿ ಪತ್ತೆಯಾಗಿದ್ದರು. ಇಂದು ವೈದ್ಯರು ಶವಪರೀಕ್ಷೆ (Post-mortem) ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.&lt;/p&gt;&lt;h2&gt;ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಕಿರುಕುಳದ ದೂರು ನೀಡಲು ಸಿದ್ಧತೆ&lt;/h2&gt;&lt;p&gt;ಪ್ರಕರಣ ಇಲ್ಲಿಗೇ ಮುಗಿಯದೆ, ಜೈಲರ್ ಸಿದ್ದರಾಮಪ್ಪ ಅವರ ಸಾವಿಗೆ ಇಲಾಖೆಯ ಉನ್ನತಾಧಿಕಾರಿಯ ಕಿರುಕುಳವೇ ಕಾರಣ ಎಂದು ಮೃತರ ಪತ್ನಿ ಲಕ್ಷ್ಮಿ ಹಾಗೂ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಮಾನಸಿಕ ಕಿರುಕುಳ (Mental Harassment) ನೀಡಿದ ಆರೋಪದಡಿ ಧಾರವಾಡ ಉಪನಗರ ಪೊಲೀಸ್ ಠಾಣೆ ದೂರು ದಾಖಲಿಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.&lt;/p&gt;&lt;h2&gt;ಮೂರು ಬಾರಿ ವಿಡಿಯೋ ಕಾನ್ಫರೆನ್ಸ್&zwnj;ನಲ್ಲಿ ನಿಂದನೆ ಆರೋಪ&lt;/h2&gt;&lt;p&gt;ನನ್ನ ಪತಿಗೆ ಡಿಜಿಪಿ ಅಲೋಕ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿದ್ದಾರೆ. ಇಲಾಖೆಯ ಅಧಿಕೃತ ವಿಡಿಯೋ ಕಾನ್ಫರೆನ್ಸ್ (Video Conference) ಸಭೆಗಳಲ್ಲಿ ಕನಿಷ್ಠ ಮೂರು ಬಾರಿ ನನ್ನ ಪತಿಯನ್ನು ಎಲ್ಲರೆದುರು ಏಕವಚನದಲ್ಲಿ ನಿಂದಿಸಲಾಗಿದೆ. ಶ್ರೀ ಶ್ರೀ ಸಿದ್ದರಾಮಪ್ಪ, ನಿನಗೆ ಯಾವ ಶಿಕ್ಷೆ ಕೊಡಬೇಕು ಹೇಳು? ಎಂದು ಮೀಟಿಂಗ್&zwnj;ನಲ್ಲಿ ಇತರ ಅಧಿಕಾರಿಗಳ ಸಮ್ಮುಖದಲ್ಲೇ ಅವಮಾನಿಸಿದ್ದರು. ಈ ನಿರಂತರ ಕಿರುಕುಳ ಹಾಗೂ ಅಮಾನತಿನಿಂದಾಗಿ ನನ್ನ ಪತಿ ಮಾನಸಿಕವಾಗಿ ಸಂಪೂರ್ಣವಾಗಿ ಕುಸಿದುಹೋಗಿದ್ದರು ಎಂದು ಪತ್ನಿ ಲಕ್ಷ್ಮಿ ಕಣ್ಣೀರಿಡುತ್ತಾ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.&lt;/p&gt;&lt;h2&gt;ಸಾವಿಗೆ ನ್ಯಾಯ ಸಿಗುವವರೆಗೆ ಹೋರಾಟದ ಎಚ್ಚರಿಕೆ&lt;/h2&gt;&lt;p&gt;ತಮ್ಮ ಪತಿಯ ಸಾವಿಗೆ ಕಾರಣರಾದ ಡಿಜಿಪಿ ಅಲೋಕ್ ಕುಮಾರ್ ಅವರ ವಿರುದ್ಧ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಮತ್ತು ತಮಗೆ ನ್ಯಾಯ ಸಿಗಬೇಕು ಎಂದು ಲಕ್ಷ್ಮಿ ಆಗ್ರಹಿಸಿದ್ದಾರೆ. &amp;nbsp;ಈ ಘಟನೆಯು ಇಡೀ ಪೊಲೀಸ್ ಹಾಗೂ ಕಾರಾಗೃಹ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಉನ್ನತಾಧಿಕಾರಿಗಳ ನಡೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/state/dharwad-jailer-siddaramappa-dies-family-accuses-dgp-alok-kumar-gdp/articleshow-fzago2g"/>
        </item>
        <item>
            <title><![CDATA[ಸರ್ಕಾರಿ ಶಾಲೆಯಲ್ಲಿ 1988- 89ರಿಂದ 1995- 96ರ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ]]></title>
            <link>https://kannada.asianetnews.com/karnataka-districts/alumni-reunion-of-1988-to-1996-students-at-a-government-school-naregal-dharwad-mrq/articleshow-g4xqc6h</link>
            <guid isPermaLink="true">https://kannada.asianetnews.com/karnataka-districts/alumni-reunion-of-1988-to-1996-students-at-a-government-school-naregal-dharwad-mrq/articleshow-g4xqc6h</guid>
            <pubDate>Sat, 13 Jun 2026 10:21:47 +0530</pubDate>
            <description><![CDATA[ನರೇಗಲ್ಲ ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡುಮಕ್ಕಳ ಶಾಲೆಯಲ್ಲಿ 1988-89 ರಿಂದ 1995-96ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಜೂ. 14 ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಹಾಗೂ ಹಾಲಿ ಶಿಕ್ಷಕರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktzmznrhabjvah3wx3a6qfgj,imgname-naregal-1781326141201.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ನರೇಗಲ್ಲ ಪಟ್ಟಣದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡುಮಕ್ಕಳ ಶಾಲೆಯಲ್ಲಿ1988- 89ರಿಂದ 1995- 96ನೇ ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ಅಧ್ಯಯನ ಮಾಡಿದ ಹಳೆಯ ವಿದ್ಯಾರ್ಥಿಗಳ ವತಿಯಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಜೂ. 14ರಂದು ಬೆಳಗ್ಗೆ 10ಕ್ಕೆ ಇಲ್ಲಿಯ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಳೆಯ ವಿದ್ಯಾರ್ಥಿ ಶಿವಾನಂದ ಮುಳಗುಂದ ತಿಳಿಸಿದರು.&lt;/p&gt;&lt;h2&gt;&lt;strong&gt;ಯಾರೆಲ್ಲಾ ಭಾಗವಹಿಸ್ತಾರಾ?&lt;/strong&gt;&lt;/h2&gt;&lt;p&gt;ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಉದ್ಘಾಟಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಚಂದ್ರಾಮ ಗ್ರಾಮಪುರೋಹಿತ ಅಧ್ಯಕ್ಷತೆ ವಹಿಸಲಿದ್ದಾರೆ. ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ಫಣಿಬಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.&lt;/p&gt;&lt;p&gt;ಜ್ಞಾನ ದೀಪಗಳು ಕಾರ್ಯಕ್ರಮದಡಿ ಧಾರವಾಡದ ನಿವೃತ್ತ ಉಪನಿರ್ದೇಶಕ ಸಂಜೀವ ಬಿಂಗೇರಿ, ರೋಣ ಅಕ್ಷರ ದಾಸೋಹದ ನಿವೃತ್ತ ಸಹಾಯಕ ನಿರ್ದೇಶಕ ವೀರಪ್ಪ ಬಸಪ್ಪ ಸಂಗನಾಳ, ನಿವೃತ್ತ ಶಿಕ್ಷಕಿ ಕುಸುಮವ್ವ ಭೀಮನಗೌಡ್ರ, ನಿವೃತ್ತ ಶಿಕ್ಷಕರಾದ ಶರಣಬಸಪ್ಪ ಬೂದಿಹಾಳ, ಅಂದಾನಪ್ಪ ಅಣಗೌಡರ, ಎಂ.ಎಸ್. ಧಡೇಸೂರಮಠ, ನಿಂಗನಗೌಡ ಚಿಕ್ಕನಗೌಡ್ರ, ಬಸವನಗೌಡ ಗೌಡರ, ಸಿ.ಬಿ. ಹಿರೇಮಠ, ನಿವೃತ್ತ ಶಿಕ್ಷಕಿ ಎಂ.ಪಿ. ಬಸರೀಗಿಡದ, ಮುಖ್ಯ ಶಿಕ್ಷಕಿ ಗೀತಾ ಗುಜ್ಜಲ ಹಾಗೂ ಶಿಕ್ಷಕಿ ಮಲ್ಲವ್ವ ಸಕ್ರೋಜಿ ಅವರನ್ನು ಸನ್ಮಾನಿಸಲಾಗುವುದು ಎಂದರು.&lt;/p&gt;&lt;p&gt;ಪತ್ರಕರ್ತ ಅರುಣ ಕುಲಕರ್ಣಿ ಮಾತನಾಡಿದರು. ಮೈಲಾರಪ್ಪ ಗೋಡಿ, ಶಿವಾನಂದ ಪದ್ಮಸಾಲಿ, ಉಮೇಶ್ ಪಾದಗಟ್ಟಿ, ಶಿವಪ್ಪ ತಳವಾರ, ವಿರೂಪಾಕ್ಷಪ್ಪ ಸಂಗನಾಳ, ಪ್ರಸನ್ನಕುಮಾರ ಗಚ್ಚಿನಮಠ, ಬಸವರಾಜ ಕುಷ್ಟಗಿ ಹಾಗೂ ಮಾಬುಸಾಬ ಎಂ. ಇದ್ದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/alumni-reunion-of-1988-to-1996-students-at-a-government-school-naregal-dharwad-mrq/articleshow-g4xqc6h"/>
        </item>
        <item>
            <title><![CDATA[ದಕ್ಷಿಣ ಭಾರತದ ರೈಲ್ವೆ ಅಭಿವೃದ್ಧಿಗೆ 448 ಕೋಟಿ, ಪುಣೆ-ಬೆಂಗಳೂರು-ಕನ್ಯಾಕುಮಾರಿ ಹಳಿ ಮೇಲ್ದರ್ಜೆಗೆ 162.57 ಕೋಟಿ!]]></title>
            <link>https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb</link>
            <guid isPermaLink="true">https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb</guid>
            <pubDate>Wed, 10 Jun 2026 18:35:55 +0530</pubDate>
            <description><![CDATA[&lt;p&gt;ಭಾರತೀಯ ರೈಲ್ವೆಯು ದಕ್ಷಿಣ ಭಾರತದ ಎರಡು ಪ್ರಮುಖ ರೈಲು ಮಾರ್ಗಗಳಾದ ಬೆಂಗಳೂರು-ತುಮಕೂರು ಮತ್ತು ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು ಆಧುನೀಕರಿಸಲು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt31x002f35r72n6m3ej59d9,imgname-indian-railways-1780366606338.jpg" type="image/jpeg" height="390" width="690"/>
            <content:encoded><![CDATA[&lt;p&gt;ಭಾರತೀಯ ರೈಲ್ವೆಯು ದಕ್ಷಿಣ ಭಾರತದ ಎರಡು ಪ್ರಮುಖ ರೈಲು ಮಾರ್ಗಗಳಾದ ಬೆಂಗಳೂರು-ತುಮಕೂರು ಮತ್ತು ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು ಆಧುನೀಕರಿಸಲು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. &amp;nbsp;&lt;/p&gt;&lt;img&gt;&lt;p&gt;ದಕ್ಷಿಣ ಭಾರತದ ಪ್ರಮುಖ ರೈಲ್ವೆ ಕಾರಿಡಾರ್&zwnj;ಗಳಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ಮತ್ತು ರೈಲು ವಿಳಂಬದ ಸಮಸ್ಯೆಗೆ ಶೀಘ್ರದಲ್ಲೇ ಮುಕ್ತಿ ಸಿಗಲಿದೆ. ದಕ್ಷಿಣ ಮಧ್ಯ ರೈಲ್ವೆ ಮತ್ತು ನೈಋತ್ಯ ರೈಲ್ವೆ ವ್ಯಾಪ್ತಿಯ ಎರಡು ಪ್ರಮುಖ ಮಾರ್ಗಗಳಲ್ಲಿ ವಿದ್ಯುತ್ ಎಳೆತ ವ್ಯವಸ್ಥೆಯನ್ನು (ಟ್ರಾಕ್ಷನ್ ಸಿಸ್ಟಮ್) ಆಧುನೀಕರಿಸಲು ಭಾರತೀಯ ರೈಲ್ವೆಯು 448 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ.&lt;/p&gt;&lt;p&gt;ದಕ್ಷಿಣ ಮಧ್ಯ ರೈಲ್ವೆಯ ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗ ಹಾಗೂ ನೈಋತ್ಯ ರೈಲ್ವೆಯ ಬೆಂಗಳೂರು-ತುಮಕೂರು ವಿಭಾಗಗಳು ಈ ಯೋಜನೆಯಡಿ ನವೀಕರಣಗೊಳ್ಳಲಿವೆ. ರೈಲುಗಳ ಸಾಮರ್ಥ್ಯವನ್ನು ಹೆಚ್ಚಿಸುವುದು, ಕಾರ್ಯಾಚರಣೆಯಲ್ಲಿ ವಿಶ್ವಾಸಾರ್ಹತೆ ತರುವುದು ಮತ್ತು ಪ್ರಯಾಣಿಕ ಹಾಗೂ ಸರಕು ಸಾಗಣೆಗೆ ವೇಗ ನೀಡುವುದು ಈ ಹೆಜ್ಜೆಯ ಮುಖ್ಯ ಉದ್ದೇಶವಾಗಿದೆ.&lt;/p&gt;&lt;img&gt;&lt;p&gt;ಈ ಯೋಜನೆಯ ಮೂಲಕ ಹಳೆಯ ವಿದ್ಯುತ್ ವ್ಯವಸ್ಥೆಯ ಜಾಗದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದ್ದು, ಇದು ಭವಿಷ್ಯದ ಹೆಚ್ಚುವರಿ ಸಂಚಾರದ ಬೇಡಿಕೆಯನ್ನು ಸಮರ್ಥವಾಗಿ ನಿಭಾಯಿಸಲಿದೆ.&lt;/p&gt;&lt;p&gt;ರೈಲ್ವೆ ಸಚಿವಾಲಯವು ಎರಡೂ ಮಾರ್ಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ 1x25 kV ವಿದ್ಯುತ್ ಎಳೆತ ವ್ಯವಸ್ಥೆಯನ್ನು ಅತ್ಯಾಧುನಿಕ 2x25 kV ವ್ಯವಸ್ಥೆಗೆ ಮೇಲ್ದರ್ಜೆಗೇರಿಸಲು ಹಸಿರು ನಿಶಾನೆ ತೋರಿಸಿದೆ. ಇಲಾಖೆಯ ಪ್ರಕಾರ, ಈ ಹೊಸ ತಂತ್ರಜ್ಞಾನವು ರೈಲುಗಳ ಸುಗಮ ಸಂಚಾರಕ್ಕೆ ಹೆಚ್ಚು ಸ್ಥಿರ ಹಾಗೂ ದಕ್ಷತೆಯಿಂದ ಕೂಡಿದ ವಿದ್ಯುತ್ ಸರಬರಾಜನ್ನು ಖಚಿತಪಡಿಸುತ್ತದೆ.&lt;/p&gt;&lt;img&gt;&lt;p&gt;ಬೆಂಗಳೂರು-ತುಮಕೂರು ರೈಲು ವಿಭಾಗವು ಪುಣೆ-ಹುಬ್ಬಳ್ಳಿ-ಚಿಕ್ಕಜಾಜೂರು-ಬೀರೂರು-ತುಮಕೂರು-ಬೆಂಗಳೂರು-ಸೇಲಂ- ಕನ್ಯಾಕುಮಾರಿ ಕಾರಿಡಾರ್&zwnj;ನ ಪ್ರಮುಖ ಭಾಗವಾಗಿದೆ. ಇದು ದಕ್ಷಿಣದ ಪ್ರಮುಖ ಆರ್ಥಿಕ ಮತ್ತು ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುವ ಅತ್ಯಂತ ಜನನಿಬಿಡ ನೆಟ್&zwnj;ವರ್ಕ್ (High Utilization Network - HUN Route-10) ಎನಿಸಿಕೊಂಡಿದೆ.&lt;/p&gt;&lt;p&gt;ಸುಮಾರು 120 ಹಳಿ ಕಿಲೋಮೀಟರ್&zwnj;ಗಳಷ್ಟು ವ್ಯಾಪಿಸಲಿರುವ ಈ ನವೀಕರಣ ಯೋಜನೆಯಿಂದಾಗಿ, ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ರೈಲುಗಳ ದಟ್ಟಣೆ ಕಡಿಮೆಯಾಗಲಿದೆ. ಅಲ್ಲದೆ, ಸಾರ್ವಜನಿಕರ ಪ್ರಯಾಣ ಹಾಗೂ ಸರಕು ಸಾಗಣೆ ಮತ್ತಷ್ಟು ಸುಗಮವಾಗಲಿದೆ.&lt;/p&gt;&lt;img&gt;&lt;p&gt;ಮಹಬೂಬ್&zwnj;ನಗರ-ಸಿಕಂದರಾಬಾದ್-ಮೇಡ್ಚಲ್ ವಿಭಾಗವು ಧರ್ಮಾವರಂ, ಧೋನೆ, ಸಿಕಂದರಾಬಾದ್, ಮುದ್ಖೇಡ್, ಇಂದೋರ್ ಮತ್ತು ಅಜ್ಮೀರ್ ನಗರಗಳನ್ನು ಜೋಡಿಸುವ ಹೈ-ಡೆನ್ಸಿಟಿ ನೆಟ್&zwnj;ವರ್ಕ್ (ಅತಿ ಹೆಚ್ಚು ಜನದಟ್ಟಣೆಯ ಮಾರ್ಗ) ಆಗಿದೆ.&lt;/p&gt;&lt;p&gt;ಹೊಸ ಎಳೆತ ವ್ಯವಸ್ಥೆಯು ಈ ಮಾರ್ಗದ ಸಾಮರ್ಥ್ಯ ಮತ್ತು ದಕ್ಷತೆಯನ್ನು ಗಣನೀಯವಾಗಿ ಹೆಚ್ಚಿಸಲಿದೆ. ಇದರಿಂದ ಸರಕು ಸಾಗಣೆ ರೈಲುಗಳ ವೇಗ ಹೆಚ್ಚಲಿದ್ದು, ಈ ಭಾಗದ ವ್ಯಾಪಾರ ಮತ್ತು ಕೈಗಾರಿಕಾ ವಲಯಕ್ಕೆ ಭಾರಿ ನೆರವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;img&gt;&lt;p&gt;ಸ್ಥಿರ ವಿದ್ಯುತ್ ಸರಬರಾಜು: ನವೀಕೃತ 2x25 kV ವ್ಯವಸ್ಥೆಯು ರೈಲುಗಳಿಗೆ ನಿರಂತರ ಹಾಗೂ ಬಲಿಷ್ಠ ವಿದ್ಯುತ್ ಸಂಪರ್ಕವನ್ನು ಒದಗಿಸುತ್ತದೆ. ತಾಂತ್ರಿಕ ಅಡಚಣೆಗಳು ಕಡಿಮೆಯಾಗುತ್ತವೆ.&lt;/p&gt;&lt;p&gt;ಹೆಚ್ಚಿನ ರೈಲುಗಳ ಸಂಚಾರ: ಮುಂಬರುವ ದಿನಗಳಲ್ಲಿ ಈ ಮಾರ್ಗಗಳಲ್ಲಿ ರೈಲ್ವೆ ಇಲಾಖೆಗೆ ಮತ್ತಷ್ಟು ಹೊಸ ರೈಲುಗಳನ್ನು ಓಡಿಸಲು ಸಾಧ್ಯವಾಗುತ್ತದೆ.&lt;/p&gt;&lt;p&gt;ಸಮಯ ಉಳಿತಾಯ: ಕಾರ್ಯಾಚರಣೆಯ ದಕ್ಷತೆ ಹೆಚ್ಚಳದಿಂದಾಗಿ ಪ್ರಯಾಣಿಕರು ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದು ಹಾಗೂ ಸರಕು ಸಾಗಣೆಯೂ ವೇಗವಾಗಿ ನಡೆಯುತ್ತದೆ.&lt;/p&gt;&lt;img&gt;&lt;p&gt;ದಕ್ಷಿಣ ರೈಲ್ವೆ ಅಭಿವೃದ್ಧಿಗೆ ಒಟ್ಟು ರೂ. 447.58 ಕೋಟಿ ಅಂದರೆ ಸುಮಾರು 448 ಕೋಟಿ ಹೂಡಿಕೆ ಮಾಡಲಾಗುತ್ತಿದೆ. ರೈಲುಗಳ ಸಾಮರ್ಥ್ಯ, ದಕ್ಷತೆ ಮತ್ತು ಸಂಚಾರದ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಬೃಹತ್ ಜಂಟಿ ಯೋಜನೆ ಇದಾಗಿದೆ&lt;/p&gt;&lt;p&gt;ಇದರಲ್ಲಿ ನೈರುತ್ಯ ರೈಲ್ವೆ ವಿಭಾಗವಾದ ಬೆಂಗಳೂರು - ತುಮಕೂರು ರೈಲು ಅಭಿವೃದ್ಧಿಗೆ ರೂ. 162.57 ಕೋಟಿ ಮೀಸಲಿಡಲಾಗಿದೆ. ಇದು ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಮತ್ತು ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುವ ನಿರಂತರ ಕಾರ್ಯನಿರತ ಕಾರಿಡಾರ್.&lt;/p&gt;&lt;img&gt;&lt;p&gt;ಮಹಬೂಬ್&zwnj;ನಗರ - ಸಿಕಂದರಾಬಾದ್ - ಮೇಡ್ಚಲ್ ದಕ್ಷಿಣ ಮಧ್ಯ ರೈಲ್ವೆ (South Central Railway) ವಿಭಾಗಕ್ಕೆ ಸೇರಿದ್ದು, ರೂ. 285.01 ಕೋಟಿ ಹೂಡಿಕೆ ಮಾಡಲಾಗಿದೆ. ಅತಿ ಹೆಚ್ಚು ಜನದಟ್ಟಣೆ ಹೊಂದಿರುವ ಮಾರ್ಗವಾಗಿದ್ದು, ಭಾರೀ ಪ್ರಮಾಣದ ಪ್ರಯಾಣಿಕ ಹಾಗೂ ಸರಕು ಸಾಗಣೆ ಅವಲಂಬಿತವಾದ ಮಾರ್ಗವಾಗಿದೆ.&lt;/p&gt;&lt;p&gt;ದಿನನಿತ್ಯ ರೈಲು ಪ್ರಯಾಣ ಮಾಡುವ ಸಾರ್ವಜನಿಕರಿಗೆ ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ರೈಲ್ವೆಯನ್ನು ನೆಚ್ಚಿಕೊಂಡಿರುವ ಉದ್ಯಮಗಳಿಗೆ ಈ ಹೂಡಿಕೆಯು ವರದಾನವಾಗಲಿದೆ. ಇದು ಮುಂಬರುವ ವರ್ಷಗಳಲ್ಲಿ ದಕ್ಷಿಣ ಭಾರತದಲ್ಲಿ ಅತ್ಯಂತ ಬಲಿಷ್ಠ ಮತ್ತು ಸುಸಜ್ಜಿತ ರೈಲ್ವೆ ಜಾಲವನ್ನು ನಿರ್ಮಿಸಲು ದಾರಿದೀಪವಾಗಲಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/indian-railways-approves-rs448-cr-for-major-south-india-route-upgrades-including-karnatakas-bengaluru-tumakuru-gdp-hs2t0lb"/>
        </item>
        <item>
            <title><![CDATA[ಧಾರವಾಡ ಯೂಥ್ ಕಾಂಗ್ರೆಸ್ ನಾಯಕನ ಕೊಲೆ ಆರೋಪಿಗೆ ಕಿಮ್ಸ್‌ನಲ್ಲಿ ರಾಜಾತಿಥ್ಯ! ಮೊಬೈಲ್ ಚಾಟಿಂಗ್, ಮದ್ಯದ ಬಾಟಲಿ ಪತ್ತೆ?]]></title>
            <link>https://kannada.asianetnews.com/karnataka-districts/dharwad-youth-congress-pyroz-pathan-murder-accused-mainuddin-nadaph-mobile-liqour-kims-hubballi-jail-lapse-sat/articleshow-l11zyh2</link>
            <guid isPermaLink="true">https://kannada.asianetnews.com/karnataka-districts/dharwad-youth-congress-pyroz-pathan-murder-accused-mainuddin-nadaph-mobile-liqour-kims-hubballi-jail-lapse-sat/articleshow-l11zyh2</guid>
            <pubDate>Tue, 09 Jun 2026 19:59:41 +0530</pubDate>
            <description><![CDATA[&lt;p&gt;ಯೂಥ್ ಕಾಂಗ್ರೆಸ್ ಮುಖಂಡ ಪೈರೋಜ್ ಪಠಾಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೈನುದ್ದೀನ್ ನಧಾಪ್, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಲ್ಲೇ ಆತ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂಬ ಆರೋಪ ಕೇಳಿಬಂದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktpcag9sgs7vzx05hktvn7gk,imgname-dharwad-mainuddin-nadaph-mobile-1781015068985.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ : ಪರಮೇಶ್ವರ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್&lt;/strong&gt;&lt;/p&gt;&lt;p&gt;&lt;strong&gt;ಧಾರವಾಡ (ಜೂ.09) : &lt;/strong&gt;ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೈರೋಜ್ ಪಠಾಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೈನುದ್ದೀನ್ ನಧಾಪ್&zwnj;ಗೆ ಕಿಮ್ಸ್ ಆಸ್ಪತ್ರೆಯಲ್ಲಿ ರಾಜಾತಿಥ್ಯ ಸಿಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.&lt;/p&gt;&lt;p&gt;&amp;nbsp;ಹೌದು ಕಳೆದ ಎಪ್ರಿಲ್ 10 ರಂದು ಯೂಥ್ ಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪೈರೋಜ್ ಪಠಾಣ ಎಂಬಾತನನ್ನ 14 ಜನರ ಗ್ಯಾಂಗ್ ಕೊಲೆ ಮಾಡಿ ಜೈಲು ಸೇರಿದ್ದಾರೆ. ಆದರೆ ಅದರಲ್ಲಿ ಕೊಲೆ ಆರೋಪಿ ಮೈನೂದ್ದಿನ್ ನಧಾಪ ಎಂಬುವನು ಅನಾರೋಗ್ಯದ ಕಾರಣದಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ&lt;/p&gt;&lt;p&gt;ಆದರೆ, ಕಳೆದ ಒಂದು ವಾರದ ಹಿಂದೆ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯಲು ಧಾರವಾಡ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿತ್ತು. ಆದರೆ ಆರೋಪಿ ಮೈನೂದ್ದಿನ ನಧಾಪ್ ಮೊಬೈಲ್ ಬಳಸಿ ಮಾತನಾಡುತ್ತಿರುವ ಹಾಗೂ ಚಾಟಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಆಸ್ಪತ್ರೆಯಲ್ಲೇ ಮದ್ಯದ ಬಾಟಲಿಗಳು ಪತ್ತೆಯಾಗಿರುವ ಆರೋಪವೂ ಕೇಳಿಬಂದಿದ್ದು, ಭದ್ರತಾ ವ್ಯವಸ್ಥೆಯ ಮೇಲೆಯೇ ಅನುಮಾನ ಮೂಡಿಸಿದೆ.&lt;/p&gt;&lt;h2&gt;&lt;strong&gt;ಜೈಲಿನ ನಿಯಮಗಳ ಉಲ್ಲಂಘನೆ&lt;/strong&gt;&lt;/h2&gt;&lt;p&gt;ಕಳೆದ ಏಪ್ರಿಲ್ 10ರಂದು ಯೂಥ್ ಕಾಂಗ್ರೆಸ್ ನ ಪೈರೋಜ್ ಪಠಾಣ್ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಮೈನುದ್ದೀನ್ ನಧಾಪ್ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರೆ ಇದೀಗ ಆಸ್ಪತ್ರೆಯ ಬೆಡ್ ಮೇಲೆಯೇ ಮಲಗಿಕೊಂಡು ಮೊಬೈಲ್&zwnj;ನಲ್ಲಿ ಮಾತನಾಡುತ್ತಿರುವ ಹಾಗೂ ಚಾಟಿಂಗ್ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗಿವೆ. ಜೈಲು ನಿಯಮಗಳ ಪ್ರಕಾರ ಬಂಧಿತ ಆರೋಪಿಗಳಿಗೆ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೆ ಮೈನುದ್ದೀನ್ ನಧಾಪ್ ಕೈಯಲ್ಲಿ ಮೊಬೈಲ್ ಹೇಗೆ ಬಂತು ಎಂಬ ಪ್ರಶ್ನೆ ಉದ್ಭವಿಸಿದೆ. ಇನ್ನೂ ಪೈರೋಜ್ ಪಠಾಣ್ ಕುಟುಂಬಕ್ಕೆ ಇದೇ ಮೊಬೈಲ್ ಮೂಲಕ ಬೆದರಿಕೆ ಸಂದೇಶಗಳು ಹೋಗಿವೆ ಎಂಬ ಗಂಭೀರ ಆರೋಪವೂ ಕೇಳಿಬರುತ್ತಿದೆ.&lt;/p&gt;&lt;p&gt;ಇದಕ್ಕಿಂತಲೂ ಆತಂಕಕಾರಿ ಸಂಗತಿ ಎಂದರೆ, ಕಿಮ್ಸ್ ಆಸ್ಪತ್ರೆಯಲ್ಲೇ ಮೊಬೈಲ್ ಜೊತೆಗೆ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎನ್ನಲಾಗುತ್ತಿದೆ. ಇದರಿಂದ ಆಸ್ಪತ್ರೆಯ ಭದ್ರತಾ ವ್ಯವಸ್ಥೆ ಹಾಗೂ ಆರೋಪಿಯ ಮೇಲಿನ ನಿಗಾ ಕುರಿತು ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಆರೋಪಿಗೆ ಈ ಎಲ್ಲ ಸೌಲಭ್ಯಗಳನ್ನು ಯಾರು ಒದಗಿಸುತ್ತಿದ್ದಾರೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ಅಧಿಕಾರಿಗಳೇ ಶಾಮೀಲು ಆರೋಪ&lt;/strong&gt;&lt;/h2&gt;&lt;p&gt;ಮೈನುದ್ದೀನ್ ನಧಾಪ್, ಪ್ರಕರಣದ ಮತ್ತೊಬ್ಬ ಆರೋಪಿ ಹಾಗೂ ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿರುವ ಇಸ್ಮಾಯಿಲ್ ತಮಾಟಗಾರನ ಸಂಬಂಧಿ ಎನ್ನಲಾಗುತ್ತಿದೆ. ಈ ನಡುವೆ ವೈರಲ್ ವಿಡಿಯೋ ಹೊಸ ವಿವಾದಕ್ಕೆ ಕಾರಣವಾಗಿದ್ದು ಜೈಲು ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಕೇಳಿಬರುತ್ತಿವೆ. ಆಸ್ಪತ್ರೆಯಲ್ಲಿರುವ ಕೊಲೆ ಆರೋಪಿಗೆ ಮೊಬೈಲ್ ಮತ್ತು ಇತರೆ ಸೌಲಭ್ಯಗಳು ಹೇಗೆ ಲಭ್ಯವಾದವು ಭದ್ರತಾ ಲೋಪ ನಡೆದಿದೆಯೇ ಇದಕ್ಕೆ ಯಾರು ಹೊಣೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪೈರೋಜ್ ಪಠಾಣ್ ಕುಟುಂಬ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.&lt;/p&gt;&lt;p&gt;ಒಟ್ಟಿನಲ್ಲಿ ಕೊಲೆ ಪ್ರಕರಣದ ಆರೋಪಿ ಆಸ್ಪತ್ರೆಯಲ್ಲೇ ರಾಜಾರೋಷವಾಗಿ ಮೊಬೈಲ್ ಬಳಸುತ್ತಿರುವ ವಿಡಿಯೋ ಹೊರಬಿದ್ದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/dharwad-youth-congress-pyroz-pathan-murder-accused-mainuddin-nadaph-mobile-liqour-kims-hubballi-jail-lapse-sat/articleshow-l11zyh2"/>
        </item>
        <item>
            <title><![CDATA[Dharwad: ಮೃತ ಗೆಳೆಯನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ 1999-2000ನೇ ಸಾಲಿನ ಸ್ನೇಹಿತರು]]></title>
            <link>https://kannada.asianetnews.com/karnataka-districts/friends-of-dharwad-provided-financial-assistance-to-the-family-of-a-deceased-friend-mrq/articleshow-l2nhnwb</link>
            <guid isPermaLink="true">https://kannada.asianetnews.com/karnataka-districts/friends-of-dharwad-provided-financial-assistance-to-the-family-of-a-deceased-friend-mrq/articleshow-l2nhnwb</guid>
            <pubDate>Mon, 15 Jun 2026 07:20:07 +0530</pubDate>
            <description><![CDATA[ಧಾರವಾಡದ ಆರ್&zwnj;ಎಲ್&zwnj;ಎಸ್&zwnj; ಹೈಸ್ಕೂಲಿನ 1999-2000ನೇ ಸಾಲಿನ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ತಮ್ಮ ಸಹಪಾಠಿ ನಬಿಸಾಬ್&zwnj; ಚಣಕನ್ನವರ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಸಹಪಾಠಿ ನಾಗರಾಜ ಜಾವೂರ ಅವರು ಮೃತನ ಮಗನ ವೈದ್ಯಕೀಯ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv4f97ds5m9s64xjnwj0q7fj,imgname-dharwad-friends-1781487934904.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ:&lt;/strong&gt; ಇಲ್ಲಿಯ ಆರ್&zwnj;ಎಲ್&zwnj;ಎಸ್&zwnj; ಹೈಸ್ಕೂಲಿನ 1999-2000ನೇ ಸಾಲಿನ ವಿದ್ಯಾರ್ಥಿ ನಬಿಸಾಬ್&zwnj; ಚಣಕನ್ನವರ ಇತ್ತೀಚೆಗೆ ಅಕಾಲಿಕವಾಗಿ ನಿಧನರಾಗಿದ್ದು, ಈತನ ಸ್ನೇಹಿತರು ಆತನ ಕುಟುಂಬಕ್ಕೆ ಭಾನುವಾರ ಆರ್ಥಿಕ ಸಹಾಯ ಮಾಡಿ ಮಾನವೀಯತೆ ಮೆರೆದರು.&lt;/p&gt;&lt;p&gt;ಪ್ರಮುಖವಾಗಿ ನಬೀಸಾಬ ಸಹಪಾಠಿ ಹಾಗೂ ವಕೀಲರೂ ಆಗಿರುವ ನಾಗರಾಜ ಜಾವೂರ ಅವರು, ಮೃತ ಸ್ನೇಹಿತನ ಪುತ್ರ ಅರೇ ವೈದ್ಯಕೀಯ ಓದುತ್ತಿದ್ದು, ಕಾಲೇಜಿನ ಶೈಕ್ಷಣಿಕ ವೆಚ್ಚದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇದರೊಂದಿಗೆ ಸರ್ಕಾರದಿಂದ ಬರಬೇಕಾದ ಸೌಲಭ್ಯ ಕೊಡಿಸುವ ಮತ್ತು ಮೃತ ಸ್ನೇಹಿತನ ಮಗನಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ನೌಕರಿ ಕೊಡಿಸಿ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸಲು ಸ್ವಯಂ ಆಗಿ ಜವಾಬ್ದಾರಿ ತೆಗೆದುಕೊಂಡಿರುವುದು ಸಮಾಜಕ್ಕೆ ಮಾದರಿ. ಈ ಸಂದರ್ಭದಲ್ಲಿ 1999-2000 ಬ್ಯಾಚ್&zwnj; ವಿದ್ಯಾರ್ಥಿಗಳಿದ್ದರು.&lt;/p&gt;&lt;p&gt;ಧಾರವಾಡದ ಆರ್&zwnj;ಎಲ್&zwnj;ಎಸ್&zwnj; ಹೈಸ್ಕೂಲಿನ 1999-2000ನೇ ಸಾಲಿನ ವಿದ್ಯಾರ್ಥಿ ನಬಿಸಾಬ್&zwnj; ಚಣಕನ್ನವರ ನಿಧನದಿಂದ ಆತನ ಬ್ಯಾಚ್&zwnj;ನ ಎಲ್ಲ ಸ್ನೇಹಿತರು ಆತನ ಕುಟುಂಬಕ್ಕೆ ಭಾನುವಾರ ಆರ್ಥಿಕ ಸಹಾಯ ಮಾಡಿ ಮಾನವೀಯತೆ ಮೆರೆದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/friends-of-dharwad-provided-financial-assistance-to-the-family-of-a-deceased-friend-mrq/articleshow-l2nhnwb"/>
        </item>
        <item>
            <title><![CDATA[Political News: 'ಘಜ್ನಿ ಮತ್ತು ಮೋದಿ-ಅಮಿತ್ ಶಾ ನಡುವೆ ಏನು ವ್ಯತ್ಯಾಸ? ಬಿ.ಕೆ.ಹರಿಪ್ರಸಾದ್ ಪ್ರಶ್ನೆ]]></title>
            <link>https://kannada.asianetnews.com/karnataka-districts/bk-hariprasad-slams-bjp-rss-modi-amit-shah-hubballi-gvd/articleshow-l4a2knb</link>
            <guid isPermaLink="true">https://kannada.asianetnews.com/karnataka-districts/bk-hariprasad-slams-bjp-rss-modi-amit-shah-hubballi-gvd/articleshow-l4a2knb</guid>
            <pubDate>Wed, 24 Jun 2026 18:39:17 +0530</pubDate>
            <description><![CDATA[&lt;p&gt;Karnataka Politics: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಬಿಜೆಪಿ, ಆರ್&zwnj;ಎಸ್&zwnj;ಎಸ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvwvzgmwcx2dhbekzy438edf,imgname-vjvj-1782306554524.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜೂ.24):&lt;/strong&gt; ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ಮತ್ತು ಆರ್&zwnj;ಎಸ್&zwnj;ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಕಿಡಿಕಾರಿದರು.&lt;/p&gt;&lt;p&gt;ಘಜ್ನಿ ಮಹಮ್ಮದ್ ದೇಶವನ್ನು 17 ಬಾರಿ ಲೂಟಿ ಮಾಡಿದ್ದ. ಆದರೆ ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ಜನರ ಭಾವನೆಗಳನ್ನು ದುರುಪಯೋಗ ಮಾಡಿಕೊಂಡು ಲೂಟಿ ನಡೆಸಿದೆ ಎಂದು ಹರಿಪ್ರಸಾದ್ ಟೀಕಿಸಿದರು. 'ಘಜ್ನಿ ಮತ್ತು ಮೋದಿ-ಅಮಿತ್ ಶಾ ನಡುವೆ ಏನು ವ್ಯತ್ಯಾಸ?' ಎಂದು ಪ್ರಶ್ನಿಸಿದ ಅವರು, ದೇಶದಲ್ಲಿ ಯಾವುದೇ ಅಧಿಕೃತ ಧರ್ಮ ಇಲ್ಲ. ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ನಡೆಯಬೇಕು ಎಂದು ಹೇಳಿದರು.&lt;/p&gt;&lt;p&gt;ಆರ್&zwnj;ಎಸ್&zwnj;ಎಸ್ ಸಂವಿಧಾನ ಮತ್ತು ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ ಹರಿಪ್ರಸಾದ್, ಸಂಘಟನೆ ಕೂಡ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. 'ಪಾದಚಾರಿ ಮಾರ್ಗದಲ್ಲಿ ಅಂಗಡಿ ಇಟ್ಟವರನ್ನೇ ಪೊಲೀಸರು ನೋಂದಣಿ ಇಲ್ಲವೆಂದು ಹಿಡಿದುಕೊಂಡು ಹೋಗುತ್ತಾರೆ. ಹಾಗಿದ್ದರೆ ಆರ್&zwnj;ಎಸ್&zwnj;ಎಸ್&zwnj;ಗೆ ನೋಂದಣಿ ಮಾಡಿಸಿಕೊಳ್ಳಲು ಏನು ಕಷ್ಟ?' ಎಂದು ಪ್ರಶ್ನಿಸಿದರು.&lt;/p&gt;&lt;p&gt;ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಮಾತನಾಡಿದ ಅವರು, ಮೂರು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರಿಂದ ಅನೇಕ ವಿದ್ಯಾರ್ಥಿಗಳ ಬದುಕು ಹಾಳಾಗಿದ್ದು, ಕೆಲವರು ಆತ್ಮ*ಹ*ತ್ಯೆಯನ್ನೂ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದೇಶದ ಶಿಕ್ಷಣ ವ್ಯವಸ್ಥೆ ಇಂತಹ ದುಸ್ಥಿತಿಗೆ ತಲುಪಬಾರದಿತ್ತು ಎಂದರು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಹರಿಪ್ರಸಾದ್, ಬಿಜೆಪಿ ಅಧಿಕಾರಕ್ಕೆ ಬಂದಾಗ &lsquo;ಅಚ್ಚೇ ದಿನ್&rsquo; ತರುತ್ತೇವೆ ಎಂದಿದ್ದರು. ಆದರೆ ಈಗ ದೇಶದಲ್ಲಿ &lsquo;ರಾಹುಕಾಲ&rsquo; ಆರಂಭವಾಗಿದೆ ಎಂದು ವ್ಯಂಗ್ಯವಾಡಿದರು.&lt;/p&gt;&lt;p&gt;ರಾಜ್ಯದ 19 ಬಿಜೆಪಿ ಲೋಕಸಭಾ ಸದಸ್ಯರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಸಮಸ್ಯೆಗಳ ಬಗ್ಗೆ ಒಬ್ಬರೂ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದರು. ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿತ್ತು. ಆದರೆ ಅದು ಎಲ್ಲಿದೆ ಎಂದು ಇನ್ನೂ ಹುಡುಕುತ್ತಿದ್ದೇವೆ ಎಂದು ಟೀಕಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೀಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಆದರೆ ಆ ಭರವಸೆಯ ಬಗ್ಗೆ ಈಗ ಯಾರೂ ಮಾತನಾಡುತ್ತಿಲ್ಲ ಎಂದು ಹರಿಪ್ರಸಾದ್ ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಬಿಜೆಪಿ ರಾಜಕೀಯ ಮಾಡುತ್ತಿದೆ&lt;/strong&gt;&lt;/h2&gt;&lt;p&gt;ಇದೇ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ಚುನಾವಣೆ ಸಂದರ್ಭಗಳಲ್ಲಿ ಪಾಕಿಸ್ತಾನ, ಹಲಾಲ್, ಚಿಕನ್ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಬಿಡದಿ ಟೌನ್&zwnj;ಶಿಪ್ ವಿಚಾರದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಹೇಳಿದ ಅವರು, ಜೆಡಿಎಸ್ ಸರ್ಕಾರದ ಅವಧಿಯಲ್ಲೇ ಆ ಯೋಜನೆಗೆ ಹಸಿರು ನಿಶಾನೆ ತೋರಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು. ಒಟ್ಟಾರೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಆರ್&zwnj;ಎಸ್&zwnj;ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಹಲವು ರಾಜಕೀಯ ಪ್ರಶ್ನೆಗಳನ್ನು ಎತ್ತಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bk-hariprasad-slams-bjp-rss-modi-amit-shah-hubballi-gvd/articleshow-l4a2knb"/>
        </item>
        <item>
            <title><![CDATA[ಧಾರವಾಡ ಪ್ರತ್ಯೇಕ ಪಾಲಿಕೆಗೆ ಶೀಘ್ರವೇ ಅಂತಿಮ ಅಧಿಸೂಚನೆ: ಸಚಿವ ಯತೀಂದ್ರ ಭರವಸೆ]]></title>
            <link>https://kannada.asianetnews.com/karnataka-districts/dharwad-separate-municipal-corporation-notification-soon-yathindra-siddaramaiah-gvd/articleshow-n587cqh</link>
            <guid isPermaLink="true">https://kannada.asianetnews.com/karnataka-districts/dharwad-separate-municipal-corporation-notification-soon-yathindra-siddaramaiah-gvd/articleshow-n587cqh</guid>
            <pubDate>Mon, 08 Jun 2026 22:57:26 +0530</pubDate>
            <description><![CDATA[&lt;p&gt;ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆನ್ನುವ ಬೇಡಿಕೆ ನ್ಯಾಯಸಮ್ಮತವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ಸಚಿವ ಯತೀಂದ್ರ ಭರವಸೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ht74ayq8tthetz5ddx7kgs7n,imgname-Screenshot-2024-03-30-130111-1711783901928.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜೂ.08): &lt;/strong&gt;ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆನ್ನುವ ಬೇಡಿಕೆ ನ್ಯಾಯಸಮ್ಮತವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು. ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಹೋರಾಟ ಸಮಿತಿ ಸದಸ್ಯರ ಜತೆ ಚರ್ಚಿಸಿದ ಸಚಿವರು, ಬೇಡಿಕೆ ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಹೋರಾಟಗಾರರು ಸತ್ಯಾಗ್ರಹ ಕೈಬಿಡಬೇಕು ಎಂದು ವಿನಂತಿಸಿದರು.&lt;/p&gt;&lt;p&gt;ಹೋರಾಟಗಾರ ವಕೀಲ ಬಿ.ಡಿ. ಹೀರೆಮಠ ಮಾತನಾಡಿ, ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಜನಾಂದೋಲನವಾಗಿ ಮಾರ್ಪಟ್ಟಿದೆ. ಪಕ್ಷಾತೀತ ಹೋರಾಟದಲ್ಲಿ ಎಲ್ಲ ಪಕ್ಷದವರು, ಸಂಘ&ndash;ಸಂಸ್ಥೆಗಳು, ಮಹಿಳಾ ಮಂಡಳಗಳು, ಯುವ ಸಂಘಟನೆಗಳು, ರೖತರು, ಕಾರ್ಮಿಕರು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ವಿವಿಧ ಧರ್ಮಗಳ ಮುಖಂಡರು, ಗಣ್ಯರು, ಸಾಹಿತಿಗಳು, ಕಲಾವಿದರು ವೈದ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದಾರೆ. ಎಲ್ಲರ ಜತೆ ಚರ್ಚಿಸಿ ಹೋರಾಟ ಕೈ ಬಿಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ಆದರೆ ಪ್ರತ್ಯೇಕ ಪಾಲಿಕೆ ರಚನೆ ಕುರಿತಂತೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದು, ಸರ್ಕಾರ ತಕ್ಷಣ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ಪ್ರತ್ಯೇಕ ಪಾಲಿಕೆ: ಇಂದು ಮಹತ್ವದ ಸಭೆ&lt;/strong&gt;&lt;/h2&gt;&lt;p&gt;ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟದ ಅಂಗವಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ನಡೆದಿರುವ ಚರ್ಚೆ ಹಾಗೂ ಸಚಿವರು ನೀಡಿರುವ ಅಭಿಪ್ರಾಯ ಮತ್ತು ಭರವಸೆಗಳ ಕುರಿತು ಚರ್ಚಿಸಲು ಜೂನ್&zwnj; 8ರ ಸೋಮವಾರ ಸಂಜೆ 4ಕ್ಕೆ ಪಾಲಿಕೆ ಕಚೇರಿ ಬಳಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ವೇದಿಕೆ ಬಳಿ ಮಹತ್ವದ ಸಭೆ ಕರೆಯಲಾಗಿದೆ. ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಎಲ್ಲರೂ ಭಾಗವಹಿಸಲು ಹೋರಾಟಗಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/dharwad-separate-municipal-corporation-notification-soon-yathindra-siddaramaiah-gvd/articleshow-n587cqh"/>
        </item>
        <item>
            <title><![CDATA[ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್: ಪ್ರಯಾಣಕ್ಕೆ ಲಕ್ಷುರಿ ಕೋಚ್‌ ರೆಡಿ, ಒಳಾಂಗಣ ವಿನ್ಯಾಸದ ವಿಡಿಯೋ ವೈರಲ್]]></title>
            <link>https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs</link>
            <guid isPermaLink="true">https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs</guid>
            <pubDate>Thu, 18 Jun 2026 12:23:36 +0530</pubDate>
            <description><![CDATA[&lt;p&gt;ಭಾರತೀಯ ರೈಲ್ವೆಯು ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ 'ವಂದೇ ಭಾರತ್ ಸ್ಲೀಪರ್' ರೈಲನ್ನು ಆರಂಭಿಸಲಿದೆ. ಈ ಪ್ರೀಮಿಯಂ ರೈಲು, ಪ್ರಸ್ತುತ ರೈಲುಗಳಿಗಿಂತ ವೇಗವಾಗಿರಲಿದ್ದು, ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಆಧುನಿಕ ಸೌಕರ್ಯಗಳಾದ ಖಾಸಗಿ ಕ್ಯಾಬಿನ್&zwnj;ಗಳು ಇದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvcq8pmmdze2dnzk112k8558,imgname-vande-bharat-bengaluru-mumbai--5--1781764741780.jpg" type="image/jpeg" height="390" width="690"/>
            <content:encoded><![CDATA[&lt;p&gt;ಭಾರತೀಯ ರೈಲ್ವೆಯು ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ 'ವಂದೇ ಭಾರತ್ ಸ್ಲೀಪರ್' ರೈಲನ್ನು ಆರಂಭಿಸಲಿದೆ. ಈ ಪ್ರೀಮಿಯಂ ರೈಲು, ಪ್ರಸ್ತುತ ರೈಲುಗಳಿಗಿಂತ ವೇಗವಾಗಿರಲಿದ್ದು, ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಆಧುನಿಕ ಸೌಕರ್ಯಗಳಾದ ಖಾಸಗಿ ಕ್ಯಾಬಿನ್&zwnj;ಗಳು ಇದೆ.&lt;/p&gt;&lt;img&gt;&lt;p&gt;ಭಾರತೀಯ ರೈಲ್ವೆಯ ಮಹತ್ವಾಕಾಂಕ್ಷಿ 'ವಂದೇ ಭಾರತ್' ಕ್ರಾಂತಿ ಈಗ ಹೊಸ ಹಂತಕ್ಕೆ ಕಾಲಿಡುತ್ತಿದೆ. ದೇಶದ ಎರಡು ಪ್ರಮುಖ ಆರ್ಥಿಕ ರಾಜಧಾನಿಗಳಾದ ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ ಮುಂಬರುವ 'ವಂದೇ ಭಾರತ್ ಸ್ಲೀಪರ್' ರೈಲು ಸಂಚಾರ ಆರಂಭಿಸಲಿದೆ. ಸಾಂಪ್ರದಾಯಿಕ ರಾತ್ರಿ ಪ್ರಯಾಣದ ರೈಲುಗಳಿಗೆ ಹೋಲಿಸಿದರೆ, ಇದು ಅತ್ಯಂತ ವೇಗದ ಮತ್ತು ಹೆಚ್ಚು ಆರಾಮದಾಯಕ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಿದೆ. ಮುಂದಿನ ಪೀಳಿಗೆಯ ಸುದೀರ್ಘ ಪ್ರಯಾಣದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಈ ಪ್ರೀಮಿಯಂ ರೈಲು ಸೇವೆಗೆ ಹಸಿರು ನಿಶಾನೆ ನೀಡಿದೆ.ರಾತ್ರಿ ಪ್ರಯಾಣಕ್ಕೆ ಹೊಸ ಮೆರುಗು&lt;/p&gt;&lt;img&gt;&lt;p&gt;ಪ್ರಸ್ತುತ ಚಾಲ್ತಿಯಲ್ಲಿರುವ ವಂದೇ ಭಾರತ್ ಚೇರ್ ಕಾರ್ (ಕುಳಿತುಕೊಳ್ಳುವ ವ್ಯವಸ್ಥೆ) ರೈಲುಗಳಿಗಿಂತ ಈ ಸ್ಲೀಪರ್ ಆವೃತ್ತಿಯು ಸಂಪೂರ್ಣ ಭಿನ್ನವಾಗಿದೆ. ಇದನ್ನು ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಜನರಿಗಾಗಿ ವಿನ್ಯಾಸಗೊಳಿಸಲಾಗಿದ್ದು, ವೇಗ ಮತ್ತು ಪ್ರಯಾಣಿಕರ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ.&lt;/p&gt;&lt;p&gt;&lt;strong&gt;ಆಧುನಿಕ ಫಸ್ಟ್ ಎಸಿ ಕೋಚ್: &lt;/strong&gt;ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ರೈಲಿನ ಮೊದಲ ಎಸಿ ಕೋಚ್&zwnj;ನ ದೃಶ್ಯಗಳು ಎಲ್ಲರ ಗಮನ ಸೆಳೆಯುತ್ತಿವೆ.&lt;/p&gt;&lt;p&gt;&lt;strong&gt;ಸುರಕ್ಷಿತ ಮೆಟ್ಟಿಲುಗಳ ವಿನ್ಯಾಸ: &lt;/strong&gt;ಹಳೆಯ ರೈಲುಗಳಲ್ಲಿ ಮೇಲಿನ ಬರ್ತ್&zwnj;ಗಳನ್ನು ಹತ್ತಲು ಕಡಿದಾದ ಕಷ್ಟಕರ ಏಣಿಗಳಿರುತ್ತಿದ್ದವು. ಆದರೆ, ವಂದೇ ಭಾರತ್ ಸ್ಲೀಪರ್&zwnj;ನಲ್ಲಿ ಮೇಲಿನ ಬರ್ತ್&zwnj;ಗಳನ್ನು ಸುಲಭವಾಗಿ ಹತ್ತಲು ಪ್ರತ್ಯೇಕ ಮತ್ತು ಸುರಕ್ಷಿತ ಮೆಟ್ಟಿಲುಗಳನ್ನು ಒದಗಿಸಲಾಗಿದೆ. ಈ ರೈಲಿನ ಫಸ್ಟ್ ಎಸಿ ಕೋಚ್ ಸಂಪೂರ್ಣ ಖಾಸಗಿ ಕ್ಯಾಬಿನ್&zwnj;ಗಳು (Private Cabins), ಮೇಲಿನ ಬರ್ತ್&zwnj;ಗಳಿಗೆ ಸುಲಭವಾಗಿ ಹತ್ತಲು ಆಧುನಿಕ ಮೆಟ್ಟಿಲುಗಳು, ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಅತ್ಯಾಧುನಿಕ ಪ್ರೀಮಿಯಂ ಒಳಾಂಗಣ ವಿನ್ಯಾಸವನ್ನು ಒಳಗೊಂಡಿರಲಿದೆ.&lt;/p&gt;&lt;p&gt;&lt;strong&gt;ಪ್ರೀಮಿಯಂ ಒಳಾಂಗಣ&lt;/strong&gt;: ಈ ಬೋಗಿಗಳಲ್ಲಿ ಸ್ಲೈಡಿಂಗ್ ಕಂಪಾರ್ಟ್&zwnj;ಮೆಂಟ್ ಬಾಗಿಲುಗಳು, ಅತ್ಯಾಧುನಿಕ ಬೆಳಕಿನ ವ್ಯವಸ್ಥೆ (Modern Lighting) ಮತ್ತು ಕಣ್ಣಿಗೆ ತಂಪು ನೀಡುವ ಸುಂದರ ಒಳಾಂಗಣ ವಿನ್ಯಾಸವಿದೆ.&lt;/p&gt;&lt;p&gt;&lt;strong&gt;ಸೌಕರ್ಯಗಳು:&lt;/strong&gt; ಆರಾಮದಾಯಕವಾದ ಮಲಗುವ ಸೀಟುಗಳು, ನವೀಕರಿಸಿದ ಫಿಟ್ಟಿಂಗ್&zwnj;ಗಳು ಮತ್ತು ಪ್ರಯಾಣಿಕ ಸ್ನೇಹಿ ವಿನ್ಯಾಸಗಳು ಉದ್ಯಮಿಗಳು ಹಾಗೂ ಪ್ರವಾಸಿಗರಿಗೆ ಅತ್ಯುತ್ತಮ ಪ್ರಯಾಣದ ಅನುಭವ ನೀಡಲಿವೆ.&lt;/p&gt;&lt;img&gt;&lt;p&gt;ಪ್ರಸ್ತುತ ಈ ಮಾರ್ಗದಲ್ಲಿ ಚಲಿಸುವ ಸಾಮಾನ್ಯ ರೈಲುಗಳು ಮುಂಬೈನಿಂದ ಬೆಂಗಳೂರನ್ನು ತಲುಪಲು ಸುಮಾರು 20 ಗಂಟೆಗಳಿಗಿಂತಲೂ ಅಧಿಕ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಹೊಸ ವಂದೇ ಭಾರತ್ ಸ್ಲೀಪರ್ ರೈಲು ಈ ಪ್ರಯಾಣದ ಸಮಯವನ್ನು ಕೇವಲ 14 ರಿಂದ 16 ಗಂಟೆಗಳಿಗೆ ಕಡಿತಗೊಳಿಸುವ ಸಾಧ್ಯತೆಯಿದೆ. ಅಂದರೆ ಪ್ರಯಾಣಿಕರಿಗೆ ಸರಿಸುಮಾರು 4 ರಿಂದ 5 ಗಂಟೆಗಳ ಸಮಯ ಉಳಿತಾಯವಾಗಲಿದೆ. ರೈಲಿನ ಸರಾಸರಿ ವೇಗವನ್ನು ಕಾಯ್ದುಕೊಳ್ಳುವ ಸಲುವಾಗಿ, ಇದಕ್ಕೆ ಅತ್ಯಂತ ಸೀಮಿತ ನಿಲುಗಡೆಗಳನ್ನು (Stoppages) ಮಾತ್ರ ನೀಡಲಾಗುವುದು ಎನ್ನಲಾಗಿದೆ. ಆದರೆ, ಭಾರತೀಯ ರೈಲ್ವೆ ಇಲಾಖೆಯು ಅಂತಿಮ ವೇಳಾಪಟ್ಟಿಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.&lt;/p&gt;&lt;img&gt;&lt;p&gt;&lt;strong&gt;ಪ್ರಯಾಣಿಕರ ಸಾಮರ್ಥ್ಯ: &lt;/strong&gt;ಈ ಸ್ಲೀಪರ್ ರೈಲು ಒಟ್ಟು 16 ಸಂಪೂರ್ಣ ಹವಾನಿಯಂತ್ರಿತ (AC) ಬೋಗಿಗಳನ್ನು ಹೊಂದಿರಲಿದ್ದು, ಒಂದೇ ಬಾರಿಗೆ 823 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ.&lt;/p&gt;&lt;p&gt;&lt;strong&gt;ಸುಧಾರಿತ ತಂತ್ರಜ್ಞಾನ: &lt;/strong&gt;ರಾತ್ರಿ ವೇಳೆಯ ಪ್ರಯಾಣದಲ್ಲಿ ಯಾವುದೇ ಗದ್ದಲವಿಲ್ಲದೆ ಸುಗಮ ಸವಾರಿಯನ್ನು ಖಚಿತಪಡಿಸಿಕೊಳ್ಳಲು ಇದರಲ್ಲಿ ಸುಧಾರಿತ 'ಸಸ್ಪೆನ್ಷನ್ ತಂತ್ರಜ್ಞಾನ'ವನ್ನು ಬಳಸಲಾಗಿದೆ.&lt;/p&gt;&lt;p&gt;&lt;strong&gt;ಸ್ವಯಂಚಾಲಿತ ಬಾಗಿಲುಗಳು ಮತ್ತು ನೈರ್ಮಲ್ಯ: &lt;/strong&gt;ರೈಲಿನಲ್ಲಿ ಆಟೋಮ್ಯಾಟಿಕ್ ಬಾಗಿಲುಗಳು, ಬಯೋ-ವ್ಯಾಕ್ಯೂಮ್ ಶೌಚಾಲಯಗಳು ಮತ್ತು ಅತ್ಯಾಧುನಿಕ ಸುರಕ್ಷತಾ ಫೀಚರ್&zwnj;ಗಳು ಲಭ್ಯವಿರಲಿವೆ.&lt;/p&gt;&lt;p&gt;&lt;strong&gt;ರೈಲಿನ ಮಾರ್ಗ ಯಾವುದು?&lt;/strong&gt;&lt;/p&gt;&lt;p&gt;ವಿವಿಧ ಮಾರ್ಗಗಳ ಜೋಡಣೆಯ ಬಗ್ಗೆ ಸದ್ಯ ಚರ್ಚೆಗಳು ನಡೆಯುತ್ತಿವೆಯಾದರೂ, ರೈಲ್ವೆ ಮಂಡಳಿಯು ಅಧಿಕೃತ ಮಾರ್ಗಸೂಚಿಯನ್ನು ಇನ್ನು ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಪ್ರಾಥಮಿಕ ವರದಿಗಳ ಪ್ರಕಾರ ಈ ರೈಲು ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ಕೈಗಾರಿಕಾ ಹಾಗೂ ಸಾಂಸ್ಕೃತಿಕ ಕೇಂದ್ರಗಳನ್ನು ಸಂಪರ್ಕಿಸಲಿದೆ. ಲೋಕಾರ್ಪಣೆ ದಿನಾಂಕ ಹತ್ತಿರ ಬಂದಾಗ ನಿಖರವಾದ ನಿಲುಗಡೆಗಳ ಮಾಹಿತಿ ಸಿಗಲಿದೆ. ಈ ರೈಲು ಕರ್ನಾಟಕದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ನಗರಗಳ ಪ್ರಮುಖ ಮಾರ್ಗದ ಮೂಲಕ ಮುಂಬೈ ತಲುಪುವ ನಿರೀಕ್ಷೆಯಿದೆ.&lt;/p&gt;&lt;img&gt;&lt;p&gt;ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದರೂ, ರೈಲ್ವೆ ಇಲಾಖೆಯು ಇದರ ಉದ್ಘಾಟನಾ ದಿನಾಂಕ, ದರ ಪಟ್ಟಿ ಅಥವಾ ಟಿಕೆಟ್ ಕಾಯ್ದಿರಿಸುವಿಕೆಯ ವೇಳಾಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಆದ್ದರಿಂದ, ಪ್ರಸ್ತುತ ಐಆರ್&zwnj;ಸಿಟಿಸಿ (IRCTC) ಆಪ್ ಅಥವಾ ಕೌಂಟರ್&zwnj;ಗಳಲ್ಲಿ ಬುಕಿಂಗ್ ಲಭ್ಯವಿರುವುದಿಲ್ಲ. ರೇಕ್ (Rake) ಹಂಚಿಕೆ ಮತ್ತು ಪ್ರಾಯೋಗಿಕ ಸಂಚಾರ ಪೂರ್ಣಗೊಂಡ ನಂತರ ಅಧಿಕೃತ ಪ್ರಕಟಣೆ ಹೊರಬೀಳಲಿದೆ.&lt;/p&gt;&lt;img&gt;&lt;p&gt;ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ ರೈಲು, ಭಾರತದ ಪ್ರಮುಖ ನಗರಗಳ ನಡುವೆ ವಿಶ್ವದರ್ಜೆಯ ಪ್ರೀಮಿಯಂ ರಾತ್ರಿ ಸಂಪರ್ಕವನ್ನು ಕಲ್ಪಿಸುವ ಭಾರತೀಯ ರೈಲ್ವೆಯ ಬೃಹತ್ ದೃಷ್ಟಿಕೋನದ ಒಂದು ಭಾಗವಾಗಿದೆ. ಈಗಾಗಲೇ ಚೇರ್ ಕಾರ್ ಮೂಲಕ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿರುವ ವಂದೇ ಭಾರತ್, ಇದೀಗ ಸ್ಲೀಪರ್ ಕೋಚ್&zwnj;ಗಳ ಮೂಲಕ ರಾತ್ರಿ ಪ್ರಯಾಣದ ವ್ಯಾಖ್ಯಾನವನ್ನೇ ಬದಲಾಯಿಸಲು ಸಜ್ಜಾಗಿದೆ. ಈ ಮಾರ್ಗವು ದೇಶದಲ್ಲೇ ಸ್ಲೀಪರ್ ರೈಲು ಪಡೆಯಲಿರುವ ಎರಡನೇ ಅತ್ಯಂತ ನಿರೀಕ್ಷಿತ ಮಾರ್ಗವಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/bengaluru-mumbai-vande-bharat-express-sleeper-first-ac-coach-inside-photos-gdp-nh56vbs"/>
        </item>
        <item>
            <title><![CDATA[ಹುಬ್ಬಳ್ಳಿ-ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ, 5 ಜಿಲ್ಲೆಯ ಪ್ರವಾಸಿಗರಿಗೆ ಇದೊಂದು ಆಫರ್!]]></title>
            <link>https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</link>
            <guid isPermaLink="true">https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</guid>
            <pubDate>Wed, 17 Jun 2026 12:01:04 +0530</pubDate>
            <description><![CDATA[ನೈಋತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 20 ಮತ್ತು 21 ರಂದು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಪ್ರವಾಸಿಗರಿಗೆ ಅನುಕೂಲಕರವಾದ ವೇಳಾಪಟ್ಟಿಯನ್ನು ಹೊಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khp601b9hctbmkhxep8fe8wz,imgname-indian-railway--2--1771344758121.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಹುಬ್ಬಳ್ಳಿ ಮತ್ತು ಪ್ರವಾಸಿ ತಾಣಗಳಿರುವ ಚಿಕ್ಕಮಗಳೂರು ನಡುವೆ ಪ್ರಯಾಣಿಸುವ ಜನರಿಗೆ ನೈಋತ್ಯ ರೈಲ್ವೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಹಾಗೂ ರೈಲುಗಳಲ್ಲಿನ ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಜೂನ್ 20 ಮತ್ತು 21 ರಂದು ಈ ಎರಡೂ ನಗರಗಳ ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ರೈಲು ಉತ್ತರ ಮತ್ತು ಮಧ್ಯ ಕರ್ನಾಟಕದ ಒಟ್ಟು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಮಾನ್ಸೂನ್ ಪ್ರಕೃತಿ ಸವಿಯಲು ಇದೊಂದು ಆಫರ್ ನೀಡಿದಂತಿದೆ. ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾದ ಈ ರೈಲಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.&lt;/p&gt;&lt;h2&gt;ರೈಲಿನ ವೇಳಾಪಟ್ಟಿ ಮತ್ತು ಸಂಚಾರದ ವಿವರ&lt;/h2&gt;&lt;p&gt;ಈ ವಿಶೇಷ ರೈಲನ್ನು ಜೂನ್ 20 (ಶನಿವಾರ) ಮತ್ತು ಜೂನ್ 21 (ಭಾನುವಾರ) ರಂದು ಒಟ್ಟು ಎರಡು ಟ್ರಿಪ್&zwnj;ಗಳ ಕಾಲ ಓಡಿಸಲಾಗುತ್ತಿದೆ.&lt;/p&gt;&lt;p&gt;ಹುಬ್ಬಳ್ಳಿ - ಚಿಕ್ಕಮಗಳೂರು ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07341): ಜೂನ್ 20 ಮತ್ತು 21 ರಂದು ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಕ್ಕೆ ಚಿಕ್ಕಮಗಳೂರು ನಿಲ್ದಾಣವನ್ನು ತಲುಪಲಿದೆ.&lt;/p&gt;&lt;p&gt;ಚಿಕ್ಕಮಗಳೂರು - ಹುಬ್ಬಳ್ಳಿ ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07342): ಜೂನ್ 20 ಮತ್ತು 21 ರಂದು ಚಿಕ್ಕಮಗಳೂರಿನಿಂದ ಸಂಜೆ 5:30 ಕ್ಕೆ ಹೊರಟು, ಅದೇ ದಿನ ರಾತ್ರಿ 11:20 ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ತಲುಪಲಿದೆ.&lt;/p&gt;&lt;h2&gt;ಎಲ್ಲೆಲ್ಲಿ ನಿಲುಗಡೆ ಇರಲಿದೆ? (ಮಾರ್ಗ ಮತ್ತು ನಿಲ್ದಾಣಗಳು)&lt;/h2&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಮಾರ್ಗಮಧ್ಯೆ ಪ್ರಮುಖ ನಗರಗಳು ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.&lt;/p&gt;&lt;p&gt;ಪ್ರಮುಖ ನಿಲುಗಡೆಗಳು: ಕುಂದಗೋಳ, ಸಂಶಿ (ಸೌಂಶಿ), ಯಳವಿಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು(ಚಿತ್ರದುರ್ಗ), ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ.&lt;/p&gt;&lt;h2&gt;ಬೋಗಿಗಳ ವಿವರ&amp;nbsp;&lt;/h2&gt;&lt;p&gt;ಈ ವಿಶೇಷ ರೈಲು ಒಟ್ಟು 10 ಬೋಗಿಗಳನ್ನು (Coaches) ಒಳಗೊಂಡಿರುತ್ತದೆ. ಸಾಮಾನ್ಯ ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೋಗಿಗಳನ್ನು ವಿನ್ಯಾಸಗೊಳಿಸಲಾಗಿದೆ:&lt;/p&gt;&lt;ul&gt; &lt;li&gt;1 ಸ್ಲೀಪರ್ ಕ್ಲಾಸ್ ಬೋಗಿ (Sleeper Class)&lt;/li&gt; &lt;li&gt;7 ಸಾಮಾನ್ಯ ದರ್ಜೆ ಬೋಗಿಗಳು (General Coach)&lt;/li&gt; &lt;li&gt;2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್ ಹಾಗೂ ದಿವ್ಯಾಂಗರ ವಿಶೇಷ ಕಂಪಾರ್ಟ್&zwnj;ಮೆಂಟ್ ಬೋಗಿಗಳು.&lt;/li&gt;&lt;/ul&gt;&lt;h2&gt;ಪ್ರವಾಸಿಗರಿಗೆ &amp;nbsp;ಸೂಕ್ತ ಸಮಯದ ಪ್ಲಾನಿಂಗ್!&lt;/h2&gt;&lt;p&gt;ನೈಋತ್ಯ ರೈಲ್ವೆ ಅಧಿಕಾರಿಗಳು ಈ ರೈಲಿನ ವೇಳಾಪಟ್ಟಿಯನ್ನು ಪ್ರವಾಸಿಗರಿಗೆ ಅತ್ಯಂತ ಅನುಕೂಲವಾಗುವ ರೀತಿಯಲ್ಲಿ ಸಿದ್ಧಪಡಿಸಿದ್ದಾರೆ.&lt;/p&gt;&lt;p&gt;ರೈಲು ಬೆಳಗ್ಗೆ 11:15ಕ್ಕೆ ಚಿಕ್ಕಮಗಳೂರು ತಲುಪುವುದರಿಂದ, ಪ್ರವಾಸಿಗರು ಆರಾಮವಾಗಿ &amp;nbsp;ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾಬುಡನ್&zwnj;ಗಿರಿ ಮುಂತಾದ ಕಡೆ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಮಾಡಲು ಸಾಕಷ್ಟು ಸಮಯ ಸಿಗುತ್ತದೆ.&lt;/p&gt;&lt;p&gt;ಇನ್ನು ಹಿಂದಿರುಗುವಾಗ ಭಾನುವಾರ ಸಂಜೆ 5:30ಕ್ಕೆ ರೈಲು ಇರುವುದರಿಂದ, ವೀಕೆಂಡ್&zwnj;ನಲ್ಲಿ ಇಡೀ ದಿನ ಸುತ್ತಾಡಿ, ಯಾವುದೇ ಆತುರವಿಲ್ಲದೇ ಆರಾಮವಾಗಿ ರೈಲು ಹತ್ತಿ ರಾತ್ರಿಯೊಳಗೆ ಹುಬ್ಬಳ್ಳಿಗೆ ತಲುಪಬಹುದಾಗಿದೆ. ಸಾರ್ವಜನಿಕರು ಹಾಗೂ ಪ್ರಕೃತಿ ಪ್ರೇಮಿಗಳು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಕೋರಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm"/>
        </item>
        <item>
            <title><![CDATA[ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳ ಪುಂಡಾಟ, ವಾರ್ಡನ್ ಮೇಲೆ ಭೀಕರ ಹಲ್ಲೆ, ಜೈಲರ್  ಕಠಿಣ ಶಿಕ್ಷೆ!]]></title>
            <link>https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c</link>
            <guid isPermaLink="true">https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c</guid>
            <pubDate>Sat, 13 Jun 2026 15:52:57 +0530</pubDate>
            <description><![CDATA[ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪುಂಡಾಟಿಕೆಯಿಂದಾಗಿ, ಆರೋಪಿಗಳಿಗೆ ಒಂದು ತಿಂಗಳ ಕಾಲ ಕುಟುಂಬಸ್ಥರ ಭೇಟಿಯನ್ನು ನಿಷೇಧಿಸಲಾಗಿದ್ದು, ಭೇಟಿಗೆ ಬಂದಿದ್ದ ಅವರ ಕುಟುಂಬಸ್ಥರು ನಿರಾಸೆಯಿಂದ ವಾಪಸ್ಸಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv07x88r8ve4er5qvrg0j8q0,imgname-dharwad-jail-harsha-murder-accused-assault-1781345984790.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಶಿವಮೊಗ್ಗದ ಪ್ರಸಿದ್ಧ ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ (Dharwad Central Jail) ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸುವ ಮೂಲಕ ಮತ್ತೆ ತಮ್ಮ ಪುಂಡಾಟಿಕೆಯನ್ನು ಪ್ರದರ್ಶಿಸಿದ್ದಾರೆ. ಈ ಘಟನೆ ಕಾರಾಗೃಹದ ಆವರಣದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಹಲ್ಲೆ ನಡೆಸಿದ ಕೈದಿಗಳಿಗೆ ಜೈಲಾಧಿಕಾರಿಗಳು ತಕ್ಷಣವೇ ಕಠಿಣ ಪನಿಷಮೆಂಟ್ ನೀಡಿದ್ದಾರೆ.&lt;/p&gt;&lt;h2&gt;ಸೆಲ್&zwnj;ನಿಂದ ಹೊರಗೆ ಬಿಡುವ ವಿಚಾರಕ್ಕೆ ಗಲಾಟೆ&lt;/h2&gt;&lt;p&gt;ಕಳೆದ 2022 ರಲ್ಲಿ ಶಿವಮೊಗ್ಗದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ಎ-1 (A1) ಮತ್ತು ಎ-2 (A2) ಆರೋಪಿಗಳನ್ನು ಅಂದಿನಿಂದಲೇ ಸುರಕ್ಷತೆಯ ದೃಷ್ಟಿಯಿಂದ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಶನಿವಾರದಂದು ಜೈಲಿನ ಸೆಲ್&zwnj;ನಿಂದ (ಬ್ಯಾರಕ್) ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.&lt;/p&gt;&lt;p&gt;ಮಾತು ಮೀರಿದಾಗ ಉದ್ಧಟತನ ತೋರಿದ ಇಬ್ಬರು ಆರೋಪಿಗಳು, ಅಲ್ಲಿಯೇ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ತೀವ್ರವಾಗಿ ಗಾಯಗೊಂಡ ವಾರ್ಡನ್ ಕಿರಣ್ ಅವರನ್ನು ತಕ್ಷಣವೇ ಜೈಲಿನ ವೈದ್ಯಕೀಯ ವಿಭಾಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಪ್ರಸಿದ್ಧ ಎಸ್&zwnj;ಡಿಎಂ (SDM) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h2&gt;ಸಬ್ ಅರ್ಬನ್ ಠಾಣೆಯಲ್ಲಿ ಕೇಸ್ ದಾಖಲು&lt;/h2&gt;&lt;p&gt;ಜೈಲಿನೊಳಗೆ ಸರ್ಕಾರಿ ನೌಕರನ ಮೇಲೆ ನಡೆದಿರುವ ಈ ದಾಳಿಯನ್ನು ಜೈಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ತವ್ಯನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ (Obstruction of Duty) ಆರೋಪದಡಿಯಲ್ಲಿ ಹರ್ಷಾ ಕೊಲೆ ಆರೋಪಿಗಳ ವಿರುದ್ಧ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಹೊಸ ಪ್ರಕರಣ ದಾಖಲಿಸಲಾಗಿದೆ.&lt;/p&gt;&lt;h2&gt;ಕುಟುಂಬಸ್ಥರ ಭೇಟಿಗೆ ಒಂದು ತಿಂಗಳು ನಿಷೇಧ&lt;/h2&gt;&lt;p&gt;ಜೈಲಿನ ನಿಯಮಾವಳಿಗಳನ್ನು ಗಾಳಿಗೆ ತೂರಿ ವಾರ್ಡನ್ ಮೇಲೆ ಹಲ್ಲೆ ನಡೆಸಿದ ಕೈದಿಗಳಿಗೆ ಜೈಲರ್ ತಕ್ಷಣವೇ ಜಾರಿಗೆ ಬರುವಂತೆ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ. ಮುಂದಿನ ಒಂದು ತಿಂಗಳ ಅವಧಿಗೆ ಯಾವುದೇ ಕುಟುಂಬದ ಸದಸ್ಯರು ಅಥವಾ ಬಂಧುಗಳು ಈ ಕೈದಿಗಳನ್ನು ಭೇಟಿ ಮಾಡದಂತೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.&lt;/p&gt;&lt;h2&gt;ಶಿವಮೊಗ್ಗದಿಂದ ಬಂದಿದ್ದ ತಾಯಿ, ಪತ್ನಿ ಕಣ್ಣೀರು ಹಾಕುತ್ತಾ ವಾಪಸ್!&lt;/h2&gt;&lt;p&gt;ಜೈಲಾಧಿಕಾರಿಗಳು ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ, ಶಿವಮೊಗ್ಗದಿಂದ ಇಬ್ಬರು ಆರೋಪಿಗಳನ್ನು ನೋಡಲು ಅವರ ತಾಯಿ ಮತ್ತು ಪತ್ನಿಯರು ಧಾರವಾಡ ಜೈಲಿನ ಬಳಿಗೆ ಆಗಮಿಸಿದ್ದರು. ಆದರೆ ಕೈದಿಗಳ ಪುಂಡಾಟಿಕೆಯಿಂದ ಆಕ್ರೋಶಗೊಂಡಿದ್ದ ಜೈಲರ್, ನಿಯಮದ ಪ್ರಕಾರ ಮುಲಾಜಿಲ್ಲದೆ ಭೇಟಿಗೆ ಅವಕಾಶ ನಿರಾಕರಿಸಿದರು. ದೂರದ ಊರಿನಿಂದ ಬಂದಿದ್ದರೂ ಸಹ ಆರೋಪಿಗಳ ಕುಟುಂಬಸ್ಥರಿಗೆ ಒಳಗೆ ಹೋಗಲು ಅನುಮತಿ ಸಿಗದ ಕಾರಣ, ಎ1 ಮತ್ತು ಎ2 ಆರೋಪಿಗಳ ಪತ್ನಿ ಹಾಗೂ ತಾಯಿ ಜೈಲಿನ ಗೇಟ್&zwnj;ನಿಂದಲೇ ಕಣ್ಣೀರು ಹಾಕುತ್ತಾ ನಿರಾಸೆಯಿಂದ ಶಿವಮೊಗ್ಗಕ್ಕೆ ವಾಪಸ್ ಹೋಗಿದ್ದಾರೆ. ಈ ಘಟನೆಯು ಜೈಲಿನೊಳಗಿನ ಭದ್ರತೆ ಮತ್ತು ಕೈದಿಗಳ ವರ್ತನೆಯ ಕುರಿತು ಮತ್ತೊಮ್ಮೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/shivamogga-harsha-murder-accused-attack-warden-in-dharwad-central-jail-gdp/articleshow-r0vve5c"/>
        </item>
        <item>
            <title><![CDATA[ಧಾರವಾಡ: ಲವ್ ಜಿಹಾದ್ ಆರೋಪಿತ ಅಪ್ರಾಪ್ತೆಯ ಆ*ತ್ಮಹ*ತ್ಯೆ ಪ್ರಕರಣ, ಸಿಪಿಐ ಶಿವಯೋಗಿ ಲೋಹಾರ್ ಸಸ್ಪೆಂಡ್‌]]></title>
            <link>https://kannada.asianetnews.com/karnataka-districts/dharwad-love-jihad-case-garga-cpi-shivayogi-lohar-suspended-pocso-delays-san/articleshow-vdlvelh</link>
            <guid isPermaLink="true">https://kannada.asianetnews.com/karnataka-districts/dharwad-love-jihad-case-garga-cpi-shivayogi-lohar-suspended-pocso-delays-san/articleshow-vdlvelh</guid>
            <pubDate>Sat, 13 Jun 2026 11:39:27 +0530</pubDate>
            <description><![CDATA[&lt;p&gt;ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಶಿವಯೋಗಿ ಲೋಹಾರ್ ಅವರನ್ನು ಅಮಾನತುಗೊಳಿಸಲಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktzseftembmbsjxq935s9t34,imgname-inspector-shivayogi-lohar-suspension-1781330820942.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ (ಜೂ.13):&lt;/strong&gt; ತಾಲ್ಲೂಕಿನ ಗರಗ ಗ್ರಾಮದಲ್ಲಿ ನಡೆದಿದ್ದ ಅಪ್ರಾಪ್ತೆ ಬಾಲಕಿಯ ಆ*ತ್ಮಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗರಗ ಪೊಲೀಸ್ ಇನ್ಸ್ಪೆಕ್ಟರ್ (CPI) ಶಿವಯೋಗಿ ಲೋಹಾರ್ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್&zwnj;ಪಿ ಗುಂಜನ್ ಆರ್ಯ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;ಮೇ 8 ರಂದು ಗರಗ ಗ್ರಾಮದ ಅಪ್ರಾಪ್ತೆ ಬಾಲಕಿ ಪೂರ್ಣಿಮಾ ವಡ್ಡರ್ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಳು. ಇದು 'ಲವ್ ಜಿಹಾದ್' ಪ್ರಕರಣ ಎಂದು ಆರೋಪಿಸಲಾಗಿತ್ತು. ಆದರೆ, ಈ ಬಗ್ಗೆ ತಕ್ಷಣವೇ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳದ ಇನ್ಸ್ಪೆಕ್ಟರ್ ಶಿವಯೋಗಿ ಲೋಹಾರ್, ಪ್ರಕರಣವನ್ನು ಮುಚ್ಚಿಹಾಕಲು ರಾಜಿ ಸಂಧಾನ ಮಾಡಿಸಿದ್ದರು ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಲು ತೀವ್ರ ವಿಳಂಬ ಧೋರಣೆ ಅನುಸರಿಸಿದ ಹಿನ್ನೆಲೆಯಲ್ಲಿ ಎಸ್&zwnj;ಪಿ ಈ ಕ್ರಮ ಜರುಗಿಸಿದ್ದಾರೆ.&lt;/p&gt;&lt;h2&gt;&lt;strong&gt;ಬಜರಂಗದಳದಿಂದ ಭಾರಿ ಪ್ರತಿಭಟನೆ&lt;/strong&gt;&lt;/h2&gt;&lt;p&gt;ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಬಜರಂಗದಳದ ಕಾರ್ಯಕರ್ತರು, ನಿನ್ನೆ ಗರಗ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಸಾರ್ವಜನಿಕ ವಲಯ ಹಾಗೂ ಸಂಘಟನೆಗಳಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಎಸ್&zwnj;ಪಿ ಗುಂಜನ್ ಆರ್ಯ ಅವರು ಇನ್ಸ್ಪೆಕ್ಟರ್&zwnj;ನನ್ನು ಅಮಾನತುಗೊಳಿಸಿ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/dharwad-love-jihad-case-garga-cpi-shivayogi-lohar-suspended-pocso-delays-san/articleshow-vdlvelh"/>
        </item>
        <item>
            <title><![CDATA[ಧಾರವಾಡ ವಿದ್ಯಾರ್ಥಿನಿಗೆ ಕಿರುಕುಳ ಆರೋಪ ಕವಿವಿ ಪ್ರೊಫೆಸರ್ ದೇವರಾಜ್ ಸಸ್ಪೆಂಡ್; ಎಬಿವಿಪಿ ಹೋರಾಟಕ್ಕೆ ಜಯ!]]></title>
            <link>https://kannada.asianetnews.com/gallery/karnataka-districts/karnatak-university-professor-devaraj-thangadurai-suspended-harassment-abvp-protest-vrmtbiw</link>
            <guid isPermaLink="true">https://kannada.asianetnews.com/gallery/karnataka-districts/karnatak-university-professor-devaraj-thangadurai-suspended-harassment-abvp-protest-vrmtbiw</guid>
            <pubDate>Wed, 17 Jun 2026 14:32:39 +0530</pubDate>
            <description><![CDATA[ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರನ್ನು ಅಮಾನತುಗೊಳಿಸಲಾಗಿದೆ. ಎಬಿವಿಪಿ ಕಾರ್ಯಕರ್ತರು ನಡೆಸಿದ ತೀವ್ರ ಪ್ರತಿಭಟನೆ ಮತ್ತು ಒತ್ತಡಕ್ಕೆ ಮಣಿದು ಕುಲಪತಿಗಳು ಈ ಆದೇಶ ಹೊರಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvacshjaafsvnsq2tk1rkr1a,imgname-2-1781686650442.jpg" type="image/jpeg" height="390" width="690"/>
            <content:encoded><![CDATA[ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರನ್ನು ಅಮಾನತುಗೊಳಿಸಲಾಗಿದೆ. ಎಬಿವಿಪಿ ಕಾರ್ಯಕರ್ತರು ನಡೆಸಿದ ತೀವ್ರ ಪ್ರತಿಭಟನೆ ಮತ್ತು ಒತ್ತಡಕ್ಕೆ ಮಣಿದು ಕುಲಪತಿಗಳು ಈ ಆದೇಶ ಹೊರಡಿಸಿದ್ದಾರೆ.&lt;img&gt;&lt;p&gt;ಧಾರವಾಡ (ಜೂ.17): ಕರ್ನಾಟಕ ವಿಶ್ವವಿದ್ಯಾಲಯದ (ಕವಿವಿ) ಆವರಣ ಬುಧವಾರ ಸಂಜೆ ರಣಾಂಗಣವಾಗಿ ಮಾರ್ಪಟ್ಟಿತ್ತು. ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಡೆಸಿದ ಬೃಹತ್ ಪ್ರತಿಭಟನೆಗೆ ವಿವಿ ಆಡಳಿತ ಮಂಡಳಿ ಕೊನೆಗೂ ಮಣಿದಿದೆ. ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಪ್ರೊಫೆಸರ್ ದೇವರಾಜ್ ಅವರನ್ನು ಅಮಾನತುಗೊಳಿಸಿ ಕುಲಪತಿ ಎ.ಎಂ. ಖಾನ್ ಆದೇಶ ಹೊರಡಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಪ್ರಕರಣದ ಹಿನ್ನೆಲೆ:&lt;/strong&gt;&lt;/p&gt;&lt;p&gt;ಕವಿವಿಯ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರು ವಿದ್ಯಾರ್ಥಿನಿಯೊಬ್ಬರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಕಳೆದ ವಾರವಷ್ಟೇ ಪ್ರೊಫೆಸರ್ ವಿದ್ಯಾರ್ಥಿನಿಯೊಬ್ಬರ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಫೋಟೋಗಳು ವಿವಿ ಆವರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಇಷ್ಟೆಲ್ಲಾ ಪುರಾವೆಗಳಿದ್ದರೂ ಕವಿವಿ ಆಡಳಿತ ಮಂಡಳಿ ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿತ್ತು. ಇದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.&lt;/p&gt;&lt;img&gt;&lt;p&gt;&lt;strong&gt;ಕವಿವಿ ಆವರಣದಲ್ಲಿ ಹೈಡ್ರಾಮಾ:&lt;/strong&gt;&lt;/p&gt;&lt;p&gt;ಪ್ರೊಫೆಸರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ವಿವಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾಕಾರರು ಕುಲಪತಿಗಳ ಭವನದತ್ತ ನುಗ್ಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ತಳ್ಳಾಟ-ನೂಕಾಟ ನಡೆಯಿತು. ಆಕ್ರೋಶಗೊಂಡ ವಿದ್ಯಾರ್ಥಿಗಳು ಬ್ಯಾರಿಕೇಡ್&zwnj;ಗಳನ್ನು ಹಾರಿ ಕುಲಪತಿಗಳ ಆಡಳಿತ ಕಚೇರಿ ಎದುರು ಜಮಾಯಿಸಿದರು. ಕಚೇರಿ ಮುಂಭಾಗದಲ್ಲಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;img&gt;&lt;p&gt;&lt;strong&gt;ಕೊನೆಗೂ ಅಮಾನತು ಆದೇಶ:&lt;/strong&gt;&lt;/p&gt;&lt;p&gt;ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಲಪತಿ ಎ.ಎಂ. ಖಾನ್ ಅವರು ಪರಿಸ್ಥಿತಿಯನ್ನು ಅವಲೋಕಿಸಿದರು. ವಿದ್ಯಾರ್ಥಿಗಳ ಪಟ್ಟು ಹಾಗೂ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದರು. ವಿವಿ ಆಡಳಿತ ಮಂಡಳಿಯಿಂದ ಅಧಿಕೃತ ಅಮಾನತು ಆದೇಶ ಹೊರಬರುತ್ತಿದ್ದಂತೆಯೇ ಎಬಿವಿಪಿ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟರು.&lt;/p&gt;&lt;img&gt;&lt;p&gt;ವಿಶ್ವವಿದ್ಯಾಲಯದಂತಹ ಪವಿತ್ರ ಶಿಕ್ಷಣ ಪ್ರಸಾರ ಕೇಂದ್ರದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ವಿದ್ಯಾರ್ಥಿನಿಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/karnatak-university-professor-devaraj-thangadurai-suspended-harassment-abvp-protest-vrmtbiw"/>
        </item>
        <item>
            <title><![CDATA[ಯೋಗೀಶ್ ಗೌಡ ಕೊಲೆ ಪ್ರಕರಣ: ನಕಲಿ ಸಾಕ್ಷ್ಯ ಸೃಷ್ಟಿಸಿ 7 ವರ್ಷ ಜೈಲು ಶಿಕ್ಷೆಗೊಳಗಾದ ಇನ್ಸ್‌ಪೆಕ್ಟರ್ ಟಿಂಗರೀಕರ್‌ಗೆ ಬೇಲ್ ಸಿಗುತ್ತಾ?]]></title>
            <link>https://kannada.asianetnews.com/karnataka-districts/dharwad-yogesh-gowda-murder-case-will-cop-who-create-fake-evidence-get-bail-rav/articleshow-x6gn6vh</link>
            <guid isPermaLink="true">https://kannada.asianetnews.com/karnataka-districts/dharwad-yogesh-gowda-murder-case-will-cop-who-create-fake-evidence-get-bail-rav/articleshow-x6gn6vh</guid>
            <pubDate>Fri, 19 Jun 2026 04:40:06 +0530</pubDate>
            <description><![CDATA[&lt;p&gt;ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ ಶಿಕ್ಷೆಗೊಳಗಾಗಿರುವ ಇನ್ಸ್&zwnj;ಪೆಕ್ಟರ್&zwnj; ಚನ್ನಕೇಶವ ಟಿಂಗರೀಕರ್&zwnj; ಜಾಮೀನು ಕೋರಿ ಹೈಕೋರ್ಟ್&zwnj;ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvef8xtkatvap5s7z70kwdfq,imgname----------------------2--1781823469394.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬೆಂಗಳೂರು (ಜೂ.19) &lt;/strong&gt;ಧಾರವಾಡದ ಬಿಜೆಪಿ&zwnj; ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ ಅಪರಾಧ ಸಂಬಂಧ ಏಳು ವರ್ಷ ಜೈಲು ಶಿಕ್ಷೆ ಗೆ ಒಳಗಾಗಿರುವ ಪೊಲೀಸ್ ಇನ್ಸ್&zwnj;ಪೆಕ್ಟರ್&zwnj; ಚನ್ನಕೇಶವ ಟಿಂಗರೀಕರ್&zwnj; ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.&lt;/p&gt;&lt;h2&gt;ತೀರ್ಪು ಕಾಯ್ದಿರಿಸಿದ ಕೋರ್ಟ್&lt;/h2&gt;&lt;p&gt;ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಅಮಾನತ್ತಿನಲ್ಲಿರಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿ ಚನ್ನಕೇಶವ ಟಿಂಗರೀಕರ್ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ನೇತೃತ್ವದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತು.&lt;/p&gt;&lt;h3&gt;ಅರ್ಜಿದಾರರ ಪರ ವಕೀಲರ ವಾದ ಏನು?&lt;/h3&gt;&lt;p&gt;ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದ ಮಂಡಿಸಿ, ಪಿತೂರಿ ನಡೆಸಿದ ಹಾಗೂ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ಟೆಂಗರೀಕರ್&zwnj; ವಿರುದ್ಧವಿದೆ. ಅದಕ್ಕೆ ಐಪಿಸಿ ಸೆಕ್ಷನ್&zwnj; 201 ಮತ್ತು 218 ಅಡಿ ಗರಿಷ್ಠ ಏಳು ವರ್ಷ ಶಿಕ್ಷೆ ವಿಧಿಸಲಾಗಿದೆ. ಇವು ಜಾಮೀನು ಸಹಿತ ಪ್ರಕರಣಗಳಾಗಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.&lt;/p&gt;&lt;h3&gt;ಸಿಬಿಐ ಪರ ವಾದವೇನು?&lt;/h3&gt;&lt;p&gt;ಸಿಬಿಐ ಪರ ಹಾಜರಿದ್ದ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಅರ್ಜಿದಾರ ಅಧಿಕಾರಿಯು ಆರೋಪಿಗಳು ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿಲ್ಲ. ಬೇರೆ ಆಯುಧಗಳನ್ನು&zwnj; ವಶಪಡಿಸಿಕೊಂಡಿದ್ದರು.&zwnj; ನಿಜವಾದ ಆರೋಪಿಗಳ ಬದಲಿಗೆ ತಪ್ಪು ಮಾಡದ ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಲು ಪ್ರಯತ್ನಿಸಿದ್ದು, ನಿಜವಾದ ಕೆಲ ಆರೋಪಿಗಳ ಹೆಸರು ಹೇಳದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ. ನೈಜ ಸಾಕ್ಷ್ಯಗಳನ್ನು ಮರೆಮಾಚಿ ಬದಲಿ ಸಾಕ್ಷ್ಯಗಳನ್ನು ಸಂಗ್ರಹಿಸಿ ತಪ್ಪೆಸಗಿದ್ದಾರೆ. ಘಟನೆ ಸಂಬಂಧ ಪ್ರಮುಖ ಆರೋಪಗಳೊಂದಿಗೆ ಕೈಜೋಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/dharwad-yogesh-gowda-murder-case-will-cop-who-create-fake-evidence-get-bail-rav/articleshow-x6gn6vh"/>
        </item>
        <item>
            <title><![CDATA[Hubballi To Dharwad: ದಣಿದ ಚಿಗರಿಗಳಿಗೆ ಪ್ರತ್ಯೇಕ ಬಿಆರ್‌ಟಿಎಸ್‌ ಕಾರಿಡಾರ್‌ ಏಕೆ?]]></title>
            <link>https://kannada.asianetnews.com/karnataka-districts/hubballi-dharwad-bus-service-public-demands-to-eliminate-traffic-congestion-by-canceling-the-brts-corridor-mrq/articleshow-yrsg624</link>
            <guid isPermaLink="true">https://kannada.asianetnews.com/karnataka-districts/hubballi-dharwad-bus-service-public-demands-to-eliminate-traffic-congestion-by-canceling-the-brts-corridor-mrq/articleshow-yrsg624</guid>
            <pubDate>Tue, 23 Jun 2026 07:53:24 +0530</pubDate>
            <description><![CDATA[ಹುಬ್ಬಳ್ಳಿ-ಧಾರವಾಡದ ಬಿಆರ್&zwnj;ಟಿಎಸ್&zwnj; ಪ್ರತ್ಯೇಕ ಕಾರಿಡಾರ್&zwnj;ನಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಹದಗೆಟ್ಟಿರುವ ಚಿಗರಿ ಬಸ್&zwnj;ಗಳು ಮತ್ತು ಕೆಲವು ಭಾಗಗಳಲ್ಲಿ ಈಗಾಗಲೇ ಮಿಶ್ರಪಥದಲ್ಲಿ ಸಂಚರಿಸುತ್ತಿರುವುದರಿಂದ, ಕಾರಿಡಾರ್ ರದ್ದುಪಡಿಸಿ ಸಂಚಾರ ದಟ್ಟಣೆ ನಿವಾರಿಸಬೇಕೆಂಬುದು ಸಾರ್ವಜನಿಕರ ಪ್ರಬಲ ಒತ್ತಾಯವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvs4gj4hcq4d3c8bae2h9hps,imgname-brts-1782181283985.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಾನಂದ ಗೊಂಬಿ&lt;/strong&gt;&lt;/p&gt;&lt;p&gt;&lt;strong&gt;ಹುಬ್ಬಳ್ಳಿ: &lt;/strong&gt;ದನಿದ ಚಿಗರಿಗಳಿಗೆ ಬಿಆರ್&zwnj;ಟಿಎಸ್&zwnj; ಕಾರಿಡಾರ್&zwnj; ಏಕೆ? ಬಿಆರ್&zwnj;ಟಿಎಸ್&zwnj; ಕಾರಿಡಾರ್&zwnj;ನ್ನೆಲ್ಲ ರದ್ದುಪಡಿಸಿ ಎಲ್ಲ ವಾಹನಗಳಿಗೆ ಅವಕಾಶ ಮಾಡಿಕೊಟ್ಟು ಪುಣ್ಯಕಟ್ಕೊಳ್ಳಿ..!&lt;/p&gt;&lt;p&gt;ಇದು ಹುಬ್ಬಳ್ಳಿ-ಧಾರವಾಡ ಮಹಾನಗರದ ಜನತೆ ಒತ್ತಾಯಿಸುತ್ತಿರುವ ಪರಿ. ಇದಕ್ಕೆ ಕಾರಣವೂ ಇಲ್ಲದಿಲ್ಲ. 2018ರಿಂದ ಆರಂಭವಾಗಿರುವ ಬಿಆರ್&zwnj;ಟಿಎಸ್&zwnj;ಗಾಗಿ ಪ್ರತ್ಯೇಕ ಕಾರಿಡಾರ್&zwnj; ಮಾಡಲಾಗಿದೆ. ಸರಿಸುಮಾರು 100 ಬಸ್&zwnj;ಗಳು ಓಡಾಡುತ್ತಿದ್ದವು. ಅವಳಿ ನಗರದ ಮಧ್ಯೆ ಸಂಚರಿಸುವ ಜನತೆಗೆ ಹೆಚ್ಚಿನ ಹವಾನಿಯಂತ್ರಿತ ಬಸ್&zwnj;ಗಳಲ್ಲಿ ಸಂಚರಿಸುವಂತಾಗಲಿ. ಜತೆಗೆ ತ್ವರಿತಗತಿಯಲ್ಲಿ ಪ್ರಯಾಣಿಸುವಂತಾಗಲಿ ಎಂಬುದು ಸರ್ಕಾರದ ಉದ್ದೇಶವಾಗಿತ್ತು. ಆದರೆ, ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿಯಾಗುತ್ತಿದೆ. ಮಿಶ್ರಪಥ ಯಾವಾಗಲೂ ಬರೀ ಟ್ರಾಫಿಕ್&zwnj;ನಿಂದ ಕೂಡಿರುತ್ತಿತ್ತು.&lt;/p&gt;&lt;h2&gt;&lt;strong&gt;ಬಿಆರ್&zwnj;ಟಿಎಸ್&zwnj;ಗೆ ಪರ್ಯಾಯವಾಗಿ ಎಲ್&zwnj;ಆರ್&zwnj;ಟಿ ಚಿಂತನೆ&lt;/strong&gt;&lt;/h2&gt;&lt;p&gt;ಕಾರಿಡಾರ್&zwnj;ನಲ್ಲಿ ಸಾರ್ವಜನಿಕ ವಾಹನಗಳಿಗೂ ಅವಕಾಶ ನೀಡಬೇಕು. ಇಲ್ಲವೇ ಬಿಆರ್&zwnj;ಟಿಎಸ್&zwnj; ಬಸ್&zwnj;ಗಳನ್ನೇ ರದ್ದುಪಡಿಸಿ ಎಂಬ ಬೇಡಿಕೆಯನ್ನಿಟ್ಟುಕೊಂಡು ರಸ್ತೆ ತಡೆ, ರ್&zwj;ಯಾಲಿ ಹೀಗೆ ಎಲ್ಲ ಬಗೆಯ ಹೋರಾಟಗಳು ನಡೆದಿವೆ. ಇವುಗಳ ನಡುವೆಯೇ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬಿಆರ್&zwnj;ಟಿಎಸ್&zwnj;ಗೆ ಪರ್ಯಾಯವಾಗಿ ಎಲ್&zwnj;ಆರ್&zwnj;ಟಿ (ಲೈಟ್&zwnj; ಟ್ರಾನ್ಸಿಟ್&zwnj; ರೈಲ್&zwnj;) ಜಾರಿಗೊಳಿಸುವ ನಿಟ್ಟಿನಲ್ಲೂ ಸಮೀಕ್ಷೆ ನಡೆಸಿದ್ದರು. ಹಿಸ್ಸಾ ಎಂಬ ಕಂಪನಿ ಸಮೀಕ್ಷೆ ನಡೆಸಿ ಎಲ್&zwnj;ಆರ್&zwnj;ಟಿ ಜಾರಿಗೊಳಿಸುವುದು ಉತ್ತಮ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿತ್ತು. ಅದಾದ ಬಳಿಕ ಸರ್ಕಾರವೂ ಬದಲಾಯಿತು. ಸಚಿವರಾಗಿದ್ದ ಲಾಡ್&zwnj; ಕೂಡ ಮಾಜಿ ಆದರು. ಸದ್ಯ ಯಾರೂ ಸಚಿವರು ಇಲ್ಲದ ಜಿಲ್ಲೆಯಾಗಿದೆ.&lt;/p&gt;&lt;h3&gt;&lt;strong&gt;ಈಗೇನು ಸಮಸ್ಯೆ?&lt;/strong&gt;&lt;/h3&gt;&lt;p&gt;ಈಗಿರುವ ಸಮಸ್ಯೆಯೆಂದರೆ ಫ್ಲೈಓವರ್&zwnj; ಕಾಮಗಾರಿಯಿಂದಾಗಿ ಬಿಆರ್&zwnj;ಟಿಎಸ್&zwnj;ನ ಕಾರಿಡಾರ್&zwnj; ಅರ್ಧಕ್ಕಿಂತ ಕಡಿಮೆಯಾಗಿದೆ. ಮಹಿಳಾ ವಿದ್ಯಾಪೀಠದಿಂದಷ್ಟೇ ಕಾರಿಡಾರ್&zwnj; ಪ್ರತ್ಯೇಕವಾಗಿದೆ. ಉಳಿದಂತೆ ಹಳೇ ಬಸ್&zwnj; ನಿಲ್ದಾಣ, ಕಾರ್ಪೋರೇಷನ್&zwnj;, ರೈಲ್ವೆ ನಿಲ್ದಾಣ, ಸಿಬಿಟಿ ವರೆಗೂ ಈ ಚಿಗರಿ ಬಸ್&zwnj;ಗಳು ಮಿಶ್ರ ಪಥದಲ್ಲೇ ಸಂಚರಿಸುತ್ತಿವೆ. ಯಾವುದೇ ಸಮಸ್ಯೆಯಾಗುತ್ತಿಲ್ಲ. ಹಾಗಾದರೆ ಮಹಿಳಾ ವಿದ್ಯಾಪೀಠದಿಂದಾದರೂ ಏಕೆ ಪ್ರತ್ಯೇಕ ಕಾರಿಡಾರ್&zwnj; ಎಂಬ ಪ್ರಶ್ನೆ ಇದೀಗ ಸಾರ್ವಜನಿಕರದ್ದು. ಅಲ್ಲಿ ಮಿಶ್ರಪಥದಲ್ಲಿ ಸಂಚರಿಸಬಹುದಾದರೆ ಇಲ್ಲಿಂದ ಧಾರವಾಡ ವರೆಗೂ ಮಿಶ್ರಪಥದಲ್ಲೇ ಸಂಚರಿಸಲಿ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಡಕೋಟಾ ಬಸ್&zwnj;ಗಳಿಗೇಕೆ ಕಾರಿಡಾರ್&zwnj;?&lt;/strong&gt;&lt;/h3&gt;&lt;p&gt;ಪೂರ್ಣವಾಗಿ ಮಹಿಳಾ ವಿದ್ಯಾಪೀಠದಿಂದ ಧಾರವಾಡ ವರೆಗೂ ಪ್ರತ್ಯೇಕ ಕಾರಿಡಾರ್&zwnj; ತೆರವುಗೊಳಿಸಿ, ಮಧ್ಯೆ ಬ್ಯಾರಿಕೇಡ್&zwnj; ಅಳವಡಿಸಬೇಕು. ಎರಡು ಬದಿಯಲ್ಲಿ ಏಕಮುಖ ಸಂಚಾರ ಮಾಡಿ ಎಲ್ಲ ವಾಹನಗಳಿಗೂ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಟ್ರಾಫಿಕ್&zwnj; ಕಿರಿಕಿರಿಯೇ ಇರುವುದಿಲ್ಲ.&lt;/p&gt;&lt;p&gt;ಬಿಆರ್&zwnj;ಟಿಎಸ್&zwnj; ಬಸ್&zwnj;ಗಳು ಇದೀಗ ಮೊದಲಿನಂತೆ ಹೈಟೆಕ್&zwnj; ಬಸ್&zwnj;ಗಳಾಗಿ ಉಳಿದಿಲ್ಲ. ಹವಾನಿಯಂತ್ರಿತ ವ್ಯವಸ್ಥೆ ಹಾಳಾಗಿದೆ. ಮುಂದಿನ ನಿಲ್ದಾಣದ ಮಾಹಿತಿ ನೀಡುವ ಧ್ವನಿಮುದ್ರಿಕೆ (ಜಿಂಗಲ್&zwnj;) ಮೌನವಾಗಿದೆ. ಮಳೆ ಬಂದರೆ ಸೋರುತ್ತವೆ. ಅಲ್ಲಲ್ಲಿ ಜಿರಳೆ ಕಾಣಸಿವೆ.&lt;/p&gt;&lt;p&gt;ಈಗಾಗಲೇ ಬೈಕ್&zwnj;, ಕಾರು, ಬಸ್&zwnj;ಗಳು ಸಹ ಕಾರಿಡಾರ್&zwnj;ನಲ್ಲೇ ಓಡಾಡುತ್ತವೆ. ಹೀಗಾಗಿ ಪ್ರತ್ಯೇಕ ಕಾರಿಡಾರ್&zwnj; ಮಾಡುವ ಅಗತ್ಯವಾದರೂ ಏನು? ಕಾರಿಡಾರ್&zwnj; ತೆರೆದು ಮಧ್ಯೆ ಬ್ಯಾರಿಕೇಡ್&zwnj; ಹಾಕಿ. ಟ್ರಾಫಿಕ್&zwnj; ಜಾಮ್&zwnj;ನಿಂದ ಮುಕ್ತವಾಗುತ್ತದೆ. ಜತೆಗೆ ಎಲ್&zwnj;ಆರ್&zwnj;ಟಿ ಸೇರಿದಂತೆ ಯಾವುದೇ ಯೋಜನೆಯೂ ಅಗತ್ಯವೇ ಬೀಳಲ್ಲ ಎಂಬ ಅಂಬೋಣ ಸಾರ್ವಜನಿಕರದ್ದು.&lt;/p&gt;&lt;p&gt;ಕಾರಿಡಾರ್&zwnj;ನಲ್ಲಿ ಎಲ್ಲ ವಾಹನಗಳು ಓಡಾಡುತ್ತಿವೆ. ಪ್ರತ್ಯೇಕ ಕಾರಿಡಾರ್&zwnj; ಎನ್ನುವುದಕ್ಕೆ ಅರ್ಥವೇ ಉಳಿದಿಲ್ಲ. ಬಸ್&zwnj;ಗಳ ಪರಿಸ್ಥಿತಿಯೂ ಸರಿ ಇಲ್ಲ. ಪ್ರತ್ಯೇಕ ಕಾರಿಡಾರ್&zwnj;ನ್ನು ತೆರವುಗೊಳಿಸಿ ಮಧ್ಯೆ ಬ್ಯಾರಿಕೇಡ್&zwnj; ಅಳವಡಿಸಿ ಟ್ರಾಫಿಕ್&zwnj; ಕಿರಿಕಿರಿ ತಗ್ಗಿಸಬೇಕು ಎಂದು ಈರೇಶ್ ಜಗಜಂಪಿ &amp;nbsp;ಎಂಬವರು ಹೇಳುತ್ತಾರೆ.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hubballi-dharwad-bus-service-public-demands-to-eliminate-traffic-congestion-by-canceling-the-brts-corridor-mrq/articleshow-yrsg624"/>
        </item>
    </channel>
</rss>
