<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 17 May 2026 20:29:30 +0530</lastBuildDate>
        <atom:link href="https://kannada.asianetnews.com/rss/dharwad" rel="self" type="application/rss+xml"/>
        <item>
            <title><![CDATA[ಬೆಳಗಾವಿ ಶಿವಂ ಅಸೋಸಿಯೇಟ್ಸ್ 4500 ಕೋಟಿ ರೂ ಹಗರಣ ಸಿಐಡಿಗೆ, ಪ್ರಕರಣ ಬೆಳಕಿಗೆ ಬರಲು ಕಾರಣ 15 ಸಾವಿರ ಬಂದೂಕು!]]></title>
            <link>https://kannada.asianetnews.com/gallery/karnataka-districts/shivanand-neelannavar-shivam-associates-rs4500-crore-scam-cid-probe-intensifies-in-belagavi-gdp-2ve7m8u</link>
            <guid isPermaLink="true">https://kannada.asianetnews.com/gallery/karnataka-districts/shivanand-neelannavar-shivam-associates-rs4500-crore-scam-cid-probe-intensifies-in-belagavi-gdp-2ve7m8u</guid>
            <pubDate>Sun, 17 May 2026 12:35:09 +0530</pubDate>
            <description><![CDATA[ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಬಂಧನಕ್ಕೊಳಗಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಆರ್&zwnj;ಬಿಐ ನಿಯಮ ಉಲ್ಲಂಘಿಸಿ, 'ಅಕ್ಯೂಮೆನ್' ಆ್ಯಪ್ ಮೂಲಕ 35 ಸಾವಿರ ಜನರಿಂದ ಠೇವಣಿ ಸಂಗ್ರಹಿಸಿ ವಂಚಿಸಿದ ಆರೋಪ ಇವರ ಮೇಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krnmvt25r1gkn62x0hb3kqy2,imgname-shivam-associates-shivanand-neelannavar--4--1778842986565.jpg" type="image/jpeg" height="390" width="690"/>
            <content:encoded><![CDATA[ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಬಂಧನಕ್ಕೊಳಗಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಆರ್&zwnj;ಬಿಐ ನಿಯಮ ಉಲ್ಲಂಘಿಸಿ, 'ಅಕ್ಯೂಮೆನ್' ಆ್ಯಪ್ ಮೂಲಕ 35 ಸಾವಿರ ಜನರಿಂದ ಠೇವಣಿ ಸಂಗ್ರಹಿಸಿ ವಂಚಿಸಿದ ಆರೋಪ ಇವರ ಮೇಲಿದೆ.&lt;img&gt;&lt;p&gt;ಬೆಳಗಾವಿ: ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಐಡಿ ತನಿಖೆ ವೇಗ ಪಡೆದುಕೊಂಡಿದೆ. ಪ್ರಕರಣದ ತನಿಖೆಗೆ ಸಿಐಡಿ ಡಿಐಜಿ ಡಾ. ಭೀಮಾಶಂಕರ ಗುಳೇದ್ ಸ್ವತಃ ಅಖಾಡಕ್ಕಿಳಿದಿದ್ದು, ಬೆಂಗಳೂರಿನಿಂದ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿದ್ದಾರೆ. ಜಿಲ್ಲಾಡಳಿತದ ವರದಿ ಹಾಗೂ ಪೊಲೀಸ್ ತನಿಖೆಯ ಪ್ರಗತಿ ಕುರಿತು ಅವರು ಮಾಹಿತಿ ಸಂಗ್ರಹಿಸಲಿದ್ದು, ಬಳಿಕ ಮುಂದಿನ ಕ್ರಮಗಳ ಬಗ್ಗೆ ಸಿಐಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.&lt;/p&gt;&lt;img&gt;&lt;p&gt;ಆರ್&zwnj;ಬಿಐ ನಿಯಮ ಉಲ್ಲಂಘಿಸಿ ಸುಮಾರು 35 ಸಾವಿರ ಜನರಿಂದ ಸಾವಿರಾರು ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿದ ಆರೋಪದ ಹಿನ್ನೆಲೆಯಲ್ಲಿ ಶಿವಾನಂದ ನೀಲಣ್ಣವರನ್ನು ಶುಕ್ರವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಉಪವಿಭಾಗಾಧಿಕಾರಿ ಶ್ರವಣ ನಾಯಿಕ ಅವರ ನೇತೃತ್ವದಲ್ಲಿ ಕಂದಾಯ, ಸಹಕಾರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಿವಾನಂದ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದೀರ್ಘಕಾಲ ಪರಿಶೀಲನೆ ನಡೆಸಿದರು. ದಿನಪೂರ್ತಿ ನಡೆದ ತಪಾಸಣೆಯ ಬಳಿಕ ರಾತ್ರಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಎಸಿಪಿ ಸತ್ಯ ನಾಯಿಕ ಹಾಗೂ ಸಿಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ಬಂಧನ ಮಾಡಲಾಯಿತು. ಬಂಧನದ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲು ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.&lt;/p&gt;&lt;img&gt;&lt;p&gt;ಶಿವಬಸವ ನಗರದಲ್ಲಿರುವ ಕಚೇರಿಯಲ್ಲಿ ಸುಮಾರು 12 ಗಂಟೆಗಳ ಕಾಲ ನಡೆದ ಪರಿಶೀಲನೆಯಲ್ಲಿ ಅಪಾರ ಪ್ರಮಾಣದ ದಾಖಲೆಗಳು ಪತ್ತೆಯಾಗಿವೆ. ಎರಡು ಮೂಟೆಗಳಷ್ಟು ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಲ್ಯಾಪ್&zwnj;ಟಾಪ್, ಕಂಪ್ಯೂಟರ್, ಮೊಬೈಲ್, ಪೆನ್&zwnj;ಡ್ರೈವ್ ಸೇರಿದಂತೆ ಹಲವು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಆನ್&zwnj;ಲೈನ್ ಹಣದ ವ್ಯವಹಾರಗಳ ಕುರಿತಂತೆ ವಿಶೇಷವಾಗಿ ಪರಿಶೀಲನೆ ನಡೆಸಲಾಗಿದೆ.&lt;/p&gt;&lt;img&gt;&lt;p&gt;ಈ ಪ್ರಕರಣದಲ್ಲಿ ಬಡ್ಸ್ ಆ್ಯಕ್ಟ್ ಸೆಕ್ಷನ್ 21 ಹಾಗೂ ಕೆಪಿಐಡಿ ಕಾಯ್ದೆಯ ಸೆಕ್ಷನ್ 9 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನಿರ್ದೇಶನದ ಮೇರೆಗೆ ಸಹಕಾರ ಇಲಾಖೆಯ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. FIR ಪ್ರಕಾರ, 2016ರಲ್ಲಿ ಶಿವಂ ಅಸೋಸಿಯೇಟ್ಸ್ ಹೆಸರಿನಲ್ಲಿ ಸಂಸ್ಥೆ ಆರಂಭಿಸಿ ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಲಾಗಿದೆ. ಹೆಚ್ಚಿನ ಬಡ್ಡಿ ಮತ್ತು ಲಾಭದ ಆಮಿಷವೊಡ್ಡಿ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಿ, ಅದರ ಒಂದು ಭಾಗವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಉಳಿದ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡು ವಂಚನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.&lt;/p&gt;&lt;img&gt;&lt;p&gt;ಶಿವಾನಂದ ನೀಲಣ್ಣವರ &lsquo;ಅಕ್ಯೂಮೆನ್&rsquo; ಎಂಬ ಆ್ಯಪ್ ಅಭಿವೃದ್ಧಿಪಡಿಸಿ ಅದರ ಮೂಲಕ ಜನರಿಂದ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರೆಂದು ತಿಳಿದುಬಂದಿದೆ. ಈ ಆ್ಯಪ್ ಮೂಲಕವೇ ಸುಮಾರು 35 ಸಾವಿರ ಜನರಿಂದ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.&lt;/p&gt;&lt;h2&gt;ತನಿಖೆಗೆ ಕಾರಣವಾದ ಹೇಳಿಕೆ&lt;/h2&gt;&lt;p&gt;&ldquo;ನನ್ನ ಬಳಿ 15 ಸಾವಿರ ಬಂದೂಕುಗಳಿವೆ&rdquo; ಎಂಬ ಶಿವಾನಂದ ನೀಡಿದ ವಿವಾದಾತ್ಮಕ ಹೇಳಿಕೆಯೇ ತನಿಖೆಗೆ ಪ್ರಮುಖ ಕಾರಣವಾಯಿತು. ಈ ಕುರಿತು ಅನಾಮಧೇಯ ವ್ಯಕ್ತಿಯೊಬ್ಬರು ಸೆಬಿಗೆ ಪತ್ರ ಬರೆದಿದ್ದು, ಅದು ಸಿಐಡಿಗೆ ರವಾನೆಯಾಯಿತು. ನಂತರ ಸಿಐಡಿ ಸೂಚನೆ ಮೇರೆಗೆ ಪ್ರಾಥಮಿಕ ಪರಿಶೀಲನೆ ಆರಂಭವಾಗಿದ್ದು, ವಂಚನೆಯ ಜಾಲ ಬಯಲಾಗಿದೆ.&lt;/p&gt;&lt;img&gt;&lt;p&gt;ಶಿವಾನಂದ ನೀಲಣ್ಣವರ ಮೂಲತಃ ಹುಬ್ಬಳ್ಳಿ ಬಳಿಯ ಉಣಕಲ್ ಗ್ರಾಮದವನು. ತಂದೆ ಮಾಜಿ ಸೈನಿಕ, ಅಪ್ಪನ ನಿಧನ ನಂತರ ಸಹೋದರನಿಗೆ ಉದ್ಯೋಗ ಸಿಕ್ಕಿತ್ತು. ಹೀಗಾಗಿ ಬೆಳಗಾವಿಗೆ ಎಲ್ಲರೂ ಶಿಫ್ಟ್ ಆಗಿದ್ದರು. ಆರಂಭದಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಆತ, ನಂತರ ಐಸ್ ಕ್ರೀಂ ವ್ಯಾಪಾರ, ಫ್ಯಾಕ್ಟರಿ ಆರಂಭಿಸಿದ. 2016ರಲ್ಲಿ ಸಾಲ ಪಡೆದು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಳಿಕ ಜನರಿಂದ ಠೇವಣಿ ಸಂಗ್ರಹಿಸಲು ಮುಂದಾದ. ಶಿವಾನಂದ ನೀಲಣ್ಣವರ ಚಾರ್ಟರ್ಡ್ ಅಕೌಂಟೆಂಟ್ ನೀಡಿದ ದಾಖಲೆಗಳನ್ನು ಪರಿಶೀಲಿಸಿದಾಗ ಸುಮಾರು ₹300 ರಿಂದ ₹400 ಕೋಟಿ ಮೊತ್ತದ ಬ್ಯಾಲೆನ್ಸ್ ಶೀಟ್ ಪತ್ತೆಯಾಗಿದೆ. ಸ್ಟಾಕ್ ಮಾರ್ಕೆಟ್, ರಿಯಲ್ ಎಸ್ಟೇಟ್, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿದ್ದೇವೆ ಎಂದು ಆತ ಹೇಳಿಕೊಂಡಿದ್ದರೂ, ಅದರ ಬಗ್ಗೆ ಸ್ಪಷ್ಟ ದಾಖಲೆಗಳು ಅನುಮಾನಾಸ್ಪದವಾಗಿವೆ.&lt;/p&gt;&lt;img&gt;&lt;p&gt;ಈ ಪ್ರಕರಣ ಕೇವಲ ಬೆಳಗಾವಿಗೆ ಸೀಮಿತವಾಗದೇ ಅಂತರ್ ಜಿಲ್ಲೆ ಹಾಗೂ ಅಂತರ್ ರಾಜ್ಯ ಮಟ್ಟಕ್ಕೆ ವ್ಯಾಪಿಸಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ಹೂಡಿಕೆ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಮನವಿ ಮಾಡಲಾಗಿದೆ. ತನಿಖೆ ಮುಂದುವರಿದಂತೆ ಇನ್ನಷ್ಟು ಸೆಕ್ಷನ್&zwnj;ಗಳನ್ನು ಸೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.&lt;/p&gt;&lt;img&gt;&lt;p&gt;ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲು ಶಿಫಾರಸು ಮಾಡುವುದಾಗಿ ಹೇಳಿದ್ದರು. ಪ್ರಾಥಮಿಕ ತನಿಖೆಯಲ್ಲಿ ಸಂಸ್ಥೆ ಆರ್&zwnj;ಬಿಐಯಲ್ಲಿ ನೋಂದಾಯಿತವಾಗಿಲ್ಲ ಎಂಬುದು ಬಹಿರಂಗವಾಗಿದೆ. ಬಂಧನದ ವೇಳೆ ಶಿವಾನಂದ ನೀಲಣ್ಣವರ, &ldquo;ಓಂ ನಮಃ ಶಿವಾಯ&hellip; ಎಲ್ಲರಿಗೂ ಒಳ್ಳೆಯದಾಗಲಿ. ಕೋಟ್ಯಂತರ ರೂಪಾಯಿ ವಂಚನೆ ಆರೋಪ ಸತ್ಯವೋ ಸುಳ್ಳೋ ನನಗೆ ಗೊತ್ತಿಲ್ಲ&rdquo; ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ನು ಬಂಧನದ ಸಮಯದಲ್ಲಿ ಕೊರಳಲ್ಲಿದ್ದ ರುದ್ರಕ್ಷಿ ಮಾಲೆ, ಚಿನ್ನದ ಉಂಗುರ, ಸರ ತೆಗೆಸಿ ಕುಟುಂಬಸ್ಥರಿಗೆ ಪೊಲೀಸರು ನೀಡಿದರು.&lt;/p&gt;&lt;p&gt;₹4,500 ಕೋಟಿ ವಂಚನೆ ಆರೋಪ ಪ್ರಕರಣವು ರಾಜ್ಯದ ಗಮನ ಸೆಳೆದಿದ್ದು, ಸಾವಿರಾರು ಹೂಡಿಕೆದಾರರ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಸಿಐಡಿ ತನಿಖೆ ಮುಂದುವರಿದಂತೆ ಇನ್ನಷ್ಟು ಮಹತ್ವದ ಅಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ.&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/shivanand-neelannavar-shivam-associates-rs4500-crore-scam-cid-probe-intensifies-in-belagavi-gdp-2ve7m8u"/>
        </item>
        <item>
            <title><![CDATA[Milind Parande: ರಾಜ್ಯದಲ್ಲಿ ಏನಾಗುತ್ತಿದೆ? ಲವ್‌ ಜಿಹಾದ್‌, ಗೋ ಸಾಗಣೆ ಬಗ್ಗೆ ವಿಎಚ್‌ಪಿ ಮುಖಂಡರ ಗಂಭೀರ ಆರೋಪ!]]></title>
            <link>https://kannada.asianetnews.com/state/vhp-leader-milind-parande-alleges-rise-in-love-jihad-cow-smuggling-congress-government-muslim-appeasement-policy/articleshow-4tt3ds4</link>
            <guid isPermaLink="true">https://kannada.asianetnews.com/state/vhp-leader-milind-parande-alleges-rise-in-love-jihad-cow-smuggling-congress-government-muslim-appeasement-policy/articleshow-4tt3ds4</guid>
            <pubDate>Tue, 12 May 2026 09:30:18 +0530</pubDate>
            <description><![CDATA[&lt;p&gt;Milind Parande Dharwad press meet ವಿಶ್ವ ಹಿಂದೂ ಪರಿಷದ್&zwnj; ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್&zwnj; ಪರಾಂಡೆ ಅವರು, ರಾಜ್ಯದಲ್ಲಿ ಲವ್&zwnj; ಜಿಹಾದ್&zwnj; ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆ ಕಾಂಗ್ರೆಸ್&zwnj; ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯೇ ಕಾರಣ ಎಂದು ಆರೋಪಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jg1abyb3y2fzry58pnzd500s,imgname-milind-parande.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ (ಮೇ.12): &lt;/strong&gt;ರಾಜ್ಯದಲ್ಲಿ ಲವ್&zwnj; ಜಿಹಾದ್&zwnj; ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಪೂರಕವಾಗಿ ಕಾಂಗ್ರೆಸ್&zwnj; ಸರ್ಕಾರ ಮುಸ್ಲಿಂ ಸಮುದಾಯದ ತುಷ್ಟೀಕರಣ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷದ್&zwnj; ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್&zwnj; ಪರಾಂಡೆ ಆರೋಪಿಸಿದರು.&lt;/p&gt;&lt;p&gt;ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ಸೇರಿ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ಶೋಷಣೆ ಜೊತೆಗೆ ಲವ್&zwnj; ಜಿಹಾದ್&zwnj;, ಲ್ಯಾಂಡ್&zwnj; ಜಿಹಾದ್&zwnj;, ಕಾರ್ಪೋರೇಟ್&zwnj; ಜಿಹಾದ್&zwnj;ಗಳು ನಡೆಯುತ್ತಿವೆ ಎಂದು ಹುಬ್ಬಳ್ಳಿಯ ಜಿಮ್&zwnj; ಪ್ರಕರಣವನ್ನು ಅವರು ಪ್ರಸ್ತಾಪಿಸಿದರು.&lt;/p&gt;&lt;p&gt;ಪ್ರಮುಖವಾಗಿ ರಾಜ್ಯದಲ್ಲಿ ಗೋವುಗಳ ರಕ್ಷಣೆಯಾಗುತ್ತಿಲ್ಲ. ಕೇರಳ, ತಮಿಳುನಾಡು ಕಡೆಗೆ ಗೋವು ಸಾಗಣೆಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕಾಗಿದೆ. ಇದಕ್ಕಾಗಿ ತಪಾಸಣಾ ಕೇಂದ್ರ ತೆರೆಯಬೇಕು ಎಂದ ಅವರು, ಶಾಲೆ-ಕಾಲೇಜುಗಳಲ್ಲಿ ಮಕ್ಕಳು, ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ಇಂತಹ ಅನೈತಿಕ ಚಟುವಟಿಕೆಗಳು ಸಮಾಜದ ಮೌಲ್ಯ ಕುಸಿತ ತೋರುತ್ತಿದೆ. ವಿವಿಧ ಸಮುದಾಯಗಳ ಮಧ್ಯೆ ಅಸಮತೋಲನ ಉಂಟು ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಲುವು ಹಾಗೂ ನಿಯಮಗಳನ್ನು ಜಾರಿಗೆ ತರಬೇಕು ಎಂದರು.&lt;/p&gt;&lt;p&gt;ಲವ್&zwnj; ಜಿಹಾದ್&zwnj;, ಅಕ್ರಮ ಗೋ ಮಾಂಸ ಸಾಗಾಣಿಕೆ ಸೇರಿದಂತೆ ಅನೈತಿಕ ಚಟುವಟಿಕೆ ತಡೆಯಲು ವಿಶ್ವ ಹಿಂದೂ ಪರಿಷದ್&zwnj; ಸದಸ್ಯರು ಪಣತೊಟ್ಟಿದೆ. ದುಷ್ಟರ ವಿರುದ್ಧ ದೂರು ದಾಖಲಿಸಿ ಕ್ರಮಕೈಗೊಳ್ಳುವ ಬದಲು ಹಿಂದೂ ಸಂಘಟನೆಗಳ ಮುಖಂಡರ ಮೇಲೆ ದೂರು ದಾಖಲಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳುವುದಿಲ್ಲ ಎಂದರು.&lt;/p&gt;&lt;p&gt;ವಿಎಚ್&zwnj;ಪಿ ಸಂಘಟನೆಯು ಉತ್ತರ ಕರ್ನಾಟಕ ಪ್ರಾಂತದ ವಿವಿಧ ಜಿಲ್ಲೆಗಳಲ್ಲಿ 100 ಸಮಿತಿಗಳ ರಚನೆ ಹಾಗೂ ಸದಸ್ಯರ ಕಾರ್ಯಾಗಾರ ಆಯೋಜಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸಮಾಜದ ಜಾಗೃತಿ ಹಾಗೂ ರಾಷ್ಟ್ರೀಯ ಏಕತೆ ನೆಲೆಸಲು ಕಾರ್ಯಯೋಜನೆ ರೂಪಿಸಿದೆ ಎಂದು ಹೇಳಿದರು.&lt;/p&gt;&lt;p&gt;ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ವಿಚಾರವಾಗಿ, ಬಂಗಾಳದಲ್ಲಿ ಈ ಹಿಂದೆ ನೂರಾರು ಹಿಂದೂಗಳ ಮಾರಣ ಹೋಮ, ಮಹಿಳೆಯರ ಮೇಲೆ ಅತ್ಯಾಚಾರಗಳಾಗಿವೆ. ನುಸುಳುಕೋರರನ್ನು ಗುರುತಿಸಿ ಹೊರ ಹಾಕಬೇಕಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಲ್ಲಿಯ ಜನರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದರು.&lt;/p&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರು ಕಡಿಮೆ ಇಂಧನ ಬಳಕೆ ವಿಚಾರ ಸಮರ್ಥಿಸಿಕೊಂಡ ಅವರು, ಈ ಹೇಳಿಕೆಯಲ್ಲಿ ತಪ್ಪೇನಿಲ್ಲ. ಉತ್ತಮ ಆಲೋಚನೆ. ಯುದ್ಧದ ಸಮಯದಲ್ಲಿ ಇಂತಹ ಸಂದರ್ಭ ಬರಲಿದೆ. ಹಿಂದಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಸಹ ಒಂದು ಹೊತ್ತಿನ ಊಟ ಬಿಡುವಂತೆ ಮನವಿ ಮಾಡಿದ್ದರು ಎಂಬುದನ್ನು ಸ್ಮರಿಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಡಾ. ಎಸ್.ಆರ್. ರಾಮನಗೌಡರ, ಗೋವರ್ಧನರಾವ್&zwnj;, ಮಹೇಶ ಪಾಟೀಲ, ಈರೇಶ ಅಂಚಟಗೇರಿ ಇದ್ದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/vhp-leader-milind-parande-alleges-rise-in-love-jihad-cow-smuggling-congress-government-muslim-appeasement-policy/articleshow-4tt3ds4"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>dharwad</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[ಸೈರನ್ ಬಂದ್.. ಸಿಸಿ ಕ್ಯಾಮೆರಾ ಕಟ್, ಮಧ್ಯರಾತ್ರಿ ಹುಬ್ಬಳ್ಳಿ ಜೈನ ಮಂದಿರಕ್ಕೆ ನುಗ್ಗಿ 3 ಕೆಜಿ ಬೆಳ್ಳಿ, ಚಿನ್ನಾಭರಣ ದೋಚಿದ ಖದೀಮರು!!]]></title>
            <link>https://kannada.asianetnews.com/gallery/karnataka-districts/siren-turned-off-cc-cameras-cut-hubballi-jain-temple-theft-at-midnight-and-loot-3-kg-silver-65uyd3z</link>
            <guid isPermaLink="true">https://kannada.asianetnews.com/gallery/karnataka-districts/siren-turned-off-cc-cameras-cut-hubballi-jain-temple-theft-at-midnight-and-loot-3-kg-silver-65uyd3z</guid>
            <pubDate>Wed, 13 May 2026 11:11:37 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಭಾರೀ ಪ್ರಮಾಣದಲ್ಲಿ ಕಳ್ಳತನವಾಗಿದೆ, ಮಧ್ಯೆರಾತ್ರಿ ಮಂದಿರಕ್ಕೆ ನುಗ್ಗಿದ ಕಳ್ಳರು, ಬಾಗಿಲು ಮುರಿದು ಸಿಸಿಟಿವಿ ಸೈರನ್ ಕಟ್ ಮಾಡಿ ಮೂರು ಕೆಜಿ ಬೆಳ್ಳಿ ದೋಚಿದ್ದಾರೆ ಸದ್ಯ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krfx1t41f5vz3nh2ca88h1qa,imgname-----------------------2026-05-13t105839.968-1778650245249.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಭಾರೀ ಪ್ರಮಾಣದಲ್ಲಿ ಕಳ್ಳತನವಾಗಿದೆ, ಮಧ್ಯೆರಾತ್ರಿ ಮಂದಿರಕ್ಕೆ ನುಗ್ಗಿದ ಕಳ್ಳರು, ಬಾಗಿಲು ಮುರಿದು ಸಿಸಿಟಿವಿ ಸೈರನ್ ಕಟ್ ಮಾಡಿ ಮೂರು ಕೆಜಿ ಬೆಳ್ಳಿ ದೋಚಿದ್ದಾರೆ ಸದ್ಯ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿಯ ಹೊಸೂರು ಪ್ರದೇಶದಲ್ಲಿ ಮಧ್ಯರಾತ್ರಿ ಸಿನಿಮೀಯ ಶೈಲಿಯಲ್ಲಿ ಜೈನ ಮಂದಿರ ಕಳ್ಳತನವಾಗಿದ್ದು, ಭಕ್ತರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.&lt;/p&gt;&lt;p&gt;ದೇವರಿಗೆ ಅಲಂಕರಿಸಿದ್ದ ಭಾರೀ ಪ್ರಮಾಣದ ಬೆಳ್ಳಿ ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ.&lt;/p&gt;&lt;img&gt;&lt;p&gt;ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೂವರು ದುಷ್ಕರ್ಮಿಗಳು ಜೈನ ಮಂದಿರಕ್ಕೆ ನುಗ್ಗಿದ್ದಾರೆ ಎನ್ನಲಾಗಿದೆ. ಮಂದಿರಕ್ಕೆ ನುಗ್ಗುವ ಮೊದಲ ಖದೀಮರು ಎಲ್ಲ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಮೊದಲು ದೇವಸ್ಥಾನದ ಸೈರನ್ ವ್ಯವಸ್ಥೆಯನ್ನು ಬಂದ್ ಮಾಡಿರುವ ಕಳ್ಳರು, ಬಳಿಕ ಸಿಸಿ ಕ್ಯಾಮೆರಾ ಕೇಬಲ್ ಕಟ್ ಮಾಡಿ ಒಳನುಗ್ಗಿದ್ದಾರೆ.&lt;/p&gt;&lt;img&gt;&lt;p&gt;ಮಂದಿರದ ಕೀಲಿ ಒಡೆದು ಒಳಗೆ ಪ್ರವೇಶಿಸಿದ ಕಳ್ಳರು, ಸುಮಾರು 3 ಕೆಜಿ ಬೆಳ್ಳಿ ಆಭರಣಗಳ ಜೊತೆಗೆ ಚಿನ್ನದ ಆಭರಣ ಮತ್ತು ಹುಂಡಿಯ ಹಣ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ದೋಚಿದ್ದಾರೆ.&lt;/p&gt;&lt;img&gt;&lt;p&gt;ಎಂದಿನಂತೆ ಇಂದು ಬೆಳಿಗ್ಗೆ ಮಂದಿರದ ಬಾಗಿಲು ತೆರೆದ ವೇಳೆ ಘಟನೆ ಬೆಳಕಿಗೆ ಬಂದಿದೆ. ಒಳಗೆ ಅಸ್ತವ್ಯಸ್ತವಾಗಿ ಚೆಲ್ಲಾಪಿಲ್ಲಿಯಾಗಿದ್ದ ಬಿದ್ದ ದೃಶ್ಯ ನೋಡಿ ಭಕ್ತರು ಬೆಚ್ಚಿಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಪಿ ಶಿವಾನಂದ ಚಲವಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ ಬೆರಳಚ್ಚು ತಜ್ಞರ ತಂಡವೂ ಸ್ಥಳ ಪರಿಶೀಲನೆ ಮಾಡಿದೆ. ಕಳ್ಳರು ಸಂಪೂರ್ಣವಾಗಿ ಪ್ಲಾನ್ ಮಾಡಿಕೊಂಡೇ ಎನ್ನುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ.&lt;/p&gt;&lt;img&gt;&lt;p&gt;ಸಿಸಿ ಕ್ಯಾಮೆರಾ ಸಂಪರ್ಕವೇ ಕಡಿತಗೊಂಡಿರುವುದು ತನಿಖೆಗೆ ಹೊಸ ಟ್ವಿಸ್ಟ್ ನೀಡಿದೆ. ಸದ್ಯ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/siren-turned-off-cc-cameras-cut-hubballi-jain-temple-theft-at-midnight-and-loot-3-kg-silver-65uyd3z"/>
        </item>
        <item>
            <title><![CDATA[ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಹಾಕಿಸಿದ ಹುಬ್ಬಳ್ಳಿಯ ಈರವ್ವ]]></title>
            <link>https://kannada.asianetnews.com/karnataka-districts/hubballi-s-eravva-dug-a-borewell-on-agricultural-land-using-congress-guarantee-gruha-lakshmi-scheme-money-mrq/articleshow-7newl8f</link>
            <guid isPermaLink="true">https://kannada.asianetnews.com/karnataka-districts/hubballi-s-eravva-dug-a-borewell-on-agricultural-land-using-congress-guarantee-gruha-lakshmi-scheme-money-mrq/articleshow-7newl8f</guid>
            <pubDate>Tue, 12 May 2026 07:56:13 +0530</pubDate>
            <description><![CDATA[ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪದ ಗೃಹಿಣಿಯೊಬ್ಬರು, ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ತಮ್ಮ ಜಮೀನಿನಲ್ಲಿ ಬೋರ್&zwnj;ವೆಲ್&zwnj; ಕೊರೆಸಿದ್ದಾರೆ. ₹50,000 ವೆಚ್ಚದಲ್ಲಿ ಕೊರೆದ ಬೋರ್&zwnj;ವೆಲ್&zwnj;ನಲ್ಲಿ 5 ಇಂಚು ನೀರು ಬಂದಿದ್ದು, ನೀರಾವರಿ ಕೃಷಿ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krczyedab5rfzzh730rmwred,imgname-gruha-lakshmi-1778552617386.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಾನಂದ ಗೊಂಬಿ&lt;/strong&gt;&lt;/p&gt;&lt;p&gt;&lt;strong&gt;ಹುಬ್ಬಳ್ಳಿ:&lt;/strong&gt; ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಅಪಸ್ವರದ ಮಧ್ಯೆಯೇ ಇಲ್ಲೊಬ್ಬ ಗೃಹಿಣಿ, ಗೃಹಲಕ್ಷ್ಮೀಯಿಂದ ಬಂದ ಹಣದಲ್ಲಿ ಬೋರ್&zwnj;ವೆಲ್&zwnj; ಕೊರೆಸಿದ್ದು 5 ಇಂಚು ನೀರು ಬಂದಿದ್ದು ನೀರಾವರಿ ಮಾಡಲು ಮುಂದಾಗಿದ್ದಾರೆ.&lt;/p&gt;&lt;p&gt;ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪದ ಈರವ್ವ ಭರಮಪ್ಪ ಅಂಗಡಿ (52) ಬೋರ್&zwnj;ವೆಲ್&zwnj; ಕೊರೆಯಿಸಿದ ಗೃಹಲಕ್ಷ್ಮಿ.&lt;/p&gt;&lt;p&gt;ಮೂಲತಃ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಈರವ್ವ. ಕುಂದಗೋಳದ ಅಜ್ಜಿ ಮನೆಯಲ್ಲಿ ಬೆಳೆದು ಮದುವೆಯಾಗಿ ಹೋಗಿದ್ದು ಸೂರಶೆಟ್ಟಿಕೊಪ್ಪಕ್ಕೆ. ಈರವ್ವ ಹಾಗೂ ಪತಿ ಭರಮ್ಮಣ್ಣ ಅಂಗಡಿಗೆ 2.5 ಎಕರೆ ಜಮೀನಿದ್ದು, ಇಬ್ಬರು ಮಕ್ಕಳಿದ್ದಾರೆ. ಕೃಷಿಯೇ ಇವರ ಕುಟುಂಬಕ್ಕೆ ಜೀವನಾಧಾರವಾಗಿದೆ. ಈರವ್ವ ಅನಕ್ಷರಸ್ಥೆಯಾಗಿದ್ದರೂ ಕೃಷಿಯಲ್ಲಿ ಮಾತ್ರ ಪತಿಯ ಹೆಗಲಿಗೆ ಹೆಗಲು ಕೊಟ್ಟು ದುಡಿದು ಕುಟುಂಬ ಸಲಹುತ್ತಿದ್ದಾರೆ. ಇವರದು ಖುಷ್ಕಿ ಜಮೀನಾಗಿದ್ದು ಮಳೆಯನ್ನೇ ಆಶ್ರಯಿಸಿದೆ. ಹೀಗಾಗಿ ಈ ಹಿಂದೇ ಬೋರ್&zwnj;ವೆಲ್&zwnj; ಕೊರೆಸಲು ಯತ್ನಿಸಿದ್ದರೂ ಆರ್ಥಿಕ ಮುಗ್ಗಟ್ಟಿನಿಂದ ಹಿನ್ನಡೆಯಾಗಿತ್ತು.&lt;/p&gt;&lt;p&gt;ಗೃಹಲಕ್ಷ್ಮೀಯಿಂದ ಬರುತ್ತಿದ್ದ ಹಣವನ್ನು ಮೊದಲ ಒಂದೆರಡು ಕಂತು (29 ಕಂತು ಬಂದಿದೆ) ಬಳಸಿಕೊಂಡಿದ್ದುಂಟು. ಆ ಬಳಿಕ ಹಣ ಬಳಸದೆ ಕೂಡಿಟ್ಟಿದ್ದು ₹ 54000 ಜಮೆ ಆಗಿದೆ. ಈ ಹಣದಲ್ಲಿಯೇ ಬೋರ್&zwnj;ವೆಲ್&zwnj; ಕೊರೆಸಲು ಪತಿ ಭರಮಣ್ಣ ಹಾಗೂ ಪುತ್ರ ರಮೇಶ ಅವರನ್ನು ಕೇಳಿ ಒಪ್ಪಿಗೆ ಪಡೆದು ₹ 50000 ವ್ಯಯಿಸಿ 220 ಅಡಿ ಬೋರ್&zwnj;ವೆಲ್&zwnj; ಕೊರೆಸಿದ್ದಾರೆ. 90 ಅಡಿಗೆ 5 ಇಂಚು ನೀರು ಸಹ ಬಂದಿದ್ದು ಸಂಭ್ರಮಿಸಿದ್ದಾರೆ.&lt;/p&gt;&lt;h2&gt;&lt;strong&gt;ಮೋಟಾರ್&zwnj; ಅಳವಡಿಸಲು ಸಾಲ&lt;/strong&gt;&lt;/h2&gt;&lt;p&gt;ಗೃಹಲಕ್ಷ್ಮೀಯಿಂದ ಬಂದ ಹಣದಲ್ಲಿ ₹ 4000 ಉಳಿದಿದ್ದು ಮೋಟಾರ್&zwnj; ಅಳವಡಿಸಲು ₹ 80000 ವೆಚ್ಚ ತಗುಲಿದ್ದು ವಿವಿಧೆಡೆ ಸಾಲ ಮಾಡಿದ್ದಾರೆ. ನೀರಾವರಿ ಮಾಡಿ ಉತ್ತಮ ಬೆಳೆ ಬೆಳೆದು ಈ ಸಾಲ ತೀರಿಸುತ್ತೇವೆಂದು ಎನ್ನುತ್ತಾರೆ ಈರವ್ವ ಹಾಗೂ ಆಕೆಯ ಪತಿ.&lt;/p&gt;&lt;h3&gt;&lt;strong&gt;ಬೋರ್&zwnj;ವೆಲ್&zwnj; ಕೊರೆಸಿ ಮಾದರಿಯಾದ ಮಹಿಳೆ&lt;/strong&gt;&lt;/h3&gt;&lt;p&gt;ಗೃಹಲಕ್ಷ್ಮೀ ಹಣದಲ್ಲಿ ಯಾವುದೇ ದುಂದು ವೆಚ್ಚ ಮಾಡದೇ ಹಣ ಉಳಿಸಿಕೊಂಡು ಜಮೀನಿನಲ್ಲಿ ಬೋರ್&zwnj;ವೆಲ್&zwnj; ಕೊರೆಯಿಸಿರುವುದು ಇತರರಿಗೆ ಮಾದರಿಯಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಅಪಸ್ವರಗಳ ಮಧ್ಯೆಯೇ ಬೋರ್&zwnj;ವೆಲ್&zwnj; ಕೊರೆಯಿಸಿ ಹಣ ಸದುಪಯೋಗಪಡಿಸಿಕೊಂಡಿರುವುದು ಇದೀಗ ಗ್ರಾಮದಲ್ಲಿ ಚರ್ಚೆಯ ವಿಷಯವಾಗಿರುವುದಂತೂ ಸತ್ಯ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ&lt;/strong&gt;&lt;/p&gt;&lt;h3&gt;&lt;strong&gt;ಈರವ್ವ ಹೇಳಿದ್ದೇನು?&lt;/strong&gt;&lt;/h3&gt;&lt;p&gt;ನಾನು ಸಾಲಿ ಕಲಿತ್ತಿಲ್ಲರ್ರಿ.. ಆದರೆ ಎರಡ್ಮೂರು ವರ್ಷದ ಹಿಂದೆನೇ ಬೋರ್&zwnj;ವೆಲ್&zwnj; ಕೊರೆಯಿಸಿದರೆ ನಮ್ಮ ಜಮೀನು ನೀರಾವರಿ ಆಗತೈತಿ. ಆಗ ಬೇಕಾದ್ದ ಬೆಳಿಬಹುದು ಅಂತ ಪ್ರಯತ್ನ ಪಟ್ಟಿದ್ವಿ.. ಆದ್ರ ರೊಕ್ಕ ಹೊಂದಸಾಕ್&zwnj; ಆಗಲಿಲ್ಲ. ಆಮೇಲಿ ಗೃಹಲಕ್ಷ್ಮೀ ದುಡ್ಡು ಬರಾಕ ಚಾಲೂ ಆತ್&zwnj;. ಮೊದಲಿಗಿ ನಾನು ರೊಕ್ಕ ತೆಗದ ಖರ್ಚ ಮಾಡಿದ್ದೆ. ದುಡ್ಡು ಉಳಿಸಿಕೊಂಡ್ರ ಬೋರ್&zwnj; ಆದ್ರೂ ಕೊರೆಸಾಕ್&zwnj; ಬರತೈತಿ ಅಂತ ಕೂಡಿಟ್ಟೆ. ಈಗ ಅದೇ ರೊಕ್ಕ ಹಾಕಿ ಬೋರ್&zwnj;ವೆಲ್&zwnj; ಕೊರೆಸೇವಿ. ಖುಷಿ ಆಗತೈತಿ. ₹ 80 ಸಾವಿರ ಸಾಲನೂ ಆಗೈತಿ. ಅದನ್ನು ದುಡಿದ ಮುಟಸ್ತೇವ್ರಿ ಎಂದು ಗೃಹಲಕ್ಷ್ಮೀ ಫಲಾನುಭವಿ ಈರವ್ವ ಭರಮಪ್ಪ ಅಂಗಡಿ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕಾಂಗ್ರೆಸ್ ಗ್ಯಾರಂಟಿ ಮಾದರಿಯಲ್ಲಿ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಚಂದ್ರಬಾಬು ನಾಯ್ಡು ಘೋಷಣೆ; ಯಾವಾಗ ಜಾರಿ?&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hubballi-s-eravva-dug-a-borewell-on-agricultural-land-using-congress-guarantee-gruha-lakshmi-scheme-money-mrq/articleshow-7newl8f"/>
        </item>
        <item>
            <title><![CDATA[ವಿಮಾನ ನಿಲ್ದಾಣಗಳಿಗೆ ಮಹನೀಯರ ನಾಮಕರಣ ಒಳ್ಳೆಯ ಕಾರ್ಯ: ಸಚಿವ ಆರ್.ಬಿ.ತಿಮ್ಮಾಪುರ]]></title>
            <link>https://kannada.asianetnews.com/karnataka-districts/rb-timmapur-kannada-naming-movement-airports-hubballi-gvd/articleshow-h6wflky</link>
            <guid isPermaLink="true">https://kannada.asianetnews.com/karnataka-districts/rb-timmapur-kannada-naming-movement-airports-hubballi-gvd/articleshow-h6wflky</guid>
            <pubDate>Tue, 05 May 2026 19:15:48 +0530</pubDate>
            <description><![CDATA[&lt;p&gt;ನಾಡಿಗಾಗಿ ಶ್ರಮಿಸಿದ, ಪ್ರಾಣ ತ್ಯಾಗ ಮಾಡಿದ ಮಹನೀಯರ ಹೆಸರನ್ನು ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಲು ಹೋರಾಟ ಮಾಡುತ್ತಿರುವುದು ಒಳ್ಳೆಯ ಕಾರ್ಯ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gj0nfyeh6xmd6c2d00jmkqqq,imgname-268e4346-9e0a-4363-ac5a-27fd19117ce2.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಮೇ.05): &lt;/strong&gt;ನಾಡಿಗಾಗಿ ಶ್ರಮಿಸಿದ, ಪ್ರಾಣ ತ್ಯಾಗ ಮಾಡಿದವರನ್ನು ನೆನಪಿಸುವುದು ನಮ್ಮೆಲ್ಲರ ಕರ್ತವ್ಯ. ಅಂತಹ ಮಹನೀಯರ ಹೆಸರನ್ನು ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಲು ಹೋರಾಟ ಮಾಡುತ್ತಿರುವುದು ಒಳ್ಳೆಯ ಕಾರ್ಯ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.&lt;/p&gt;&lt;p&gt;ಅವರು ನಗರದ ಖಾಸಗಿ ಹೊಟೇಲ್&zwnj;ನಲ್ಲಿ ಕನ್ನಡದ ನಾಮಕರಣ ಚಳವಳಿ ಸಮಿತಿಯಿಂದ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣಕ್ಕೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆ ಹಾಗೂ ಸಮಿತಿಯ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.&lt;/p&gt;&lt;p&gt;ಇದೊಂದು ಅದ್ಭುತವಾದ ಹೋರಾಟವಾಗಿದೆ. ಮುಂದಿನ ದಿನಗಳಲ್ಲಿ ಇಡೀ ಚಿತ್ರರಂಗವನ್ನು ಹುಬ್ಬಳ್ಳಿಗೆ ಕರೆಸಿ ಹೋರಾಟ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸದಾ ನನ್ನ ಬೆಂಬಲವಿದೆ. ಹುಬ್ಬಳ್ಳಿಯನ್ನು ಕೇಂದ್ರದ ಶಕ್ತಿ ಕೇಂದ್ರ ಎಂದು ಹೇಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಪಕ್ಕದಲ್ಲಿ ಕೂರುವವರು ಹುಬ್ಬಳ್ಳಿಯವರೆ ಇದ್ದಾರೆ. ಹೀಗಿದ್ಯಾಗೂ ನೀವು ಹೋರಾಟದ ಹಾದಿ ಹಿಡಿದಿರುವುದು ಬೇಸರ ತರಿಸಿದೆ. ನೀವು ಹೋರಾಟದ ಹಾದಿ ಮೂಲಕ ಸರ್ಕಾರಗಳನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೀರಿ. ಈ ಹೋರಾಟ ಯಶಸ್ವಿಯಾಗಲಿ. ಅದೇ ರೀತಿ ಮೇ 30ಕ್ಕೆ ಹಮ್ಮಿಕೊಂಡಿರುವ ಬೃಹತ್ ಹೋರಾಟ ಯಶ ಕಾಣಲಿ ಎಂದರು.&lt;/p&gt;&lt;p&gt;ಇದೇ ಸಂದರ್ಭದಲ್ಲಿ ಸಮಿತಿಯ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಕೆಜಿಪಿ ಫೌಂಡೇಶನ್&zwnj; ಅಧ್ಯಕ್ಷ ಶ್ರೀಗಂಧ ಶೇಟ್, ಕಾರ್ಯದರ್ಶಿಯಾಗಿ ಅರ್ಜುನ ಪಾಟೀಲ ಸೇರಿದಂತೆ ವಿವಿಧ ತಾಲೂಕು, ಕ್ಷೇತ್ರಗಳ ಅಧ್ಯಕ್ಷ, ಪದಾಧಿಕಾರಿಗಳನ್ನು ನೇಮಕ ಮಾಡಿ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು.&lt;/p&gt;&lt;h2&gt;&lt;strong&gt;ಮೇ 30ಕ್ಕೆ ಪ್ರತಿಭಟನಾ ಮೆರವಣಿಗೆ&lt;/strong&gt;&lt;/h2&gt;&lt;p&gt;ಕನ್ನಡದ ನಾಮಕರಣ ಚಳವಳಿ ಸಮಿತಿ ಸಂಚಾಲಕ ಶಿವಾನಂದ ಮುತ್ತಣ್ಣವರ ಪ್ರಾಸ್ತಾವಿಕ ಮಾತನಾಡಿ, ಮೇ 30ರಂದು ಮೂರುಸಾವಿರ ಮಠದಿಂದ 3ನೇ ಬಾರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಚಿತ್ರರಂಗದ ಗಣ್ಯರು, ನಟರು ಪಾಲ್ಗೊಳ್ಳಲಿದ್ದಾರೆ. ಒಂದು ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದರು.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/rb-timmapur-kannada-naming-movement-airports-hubballi-gvd/articleshow-h6wflky"/>
        </item>
        <item>
            <title><![CDATA[ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಚಲಿಸುವ ರೈಲುಗಳು ಇನ್ಮುಂದೆ ಕಾಯಂ; ಟಿಕೆಟ್ ದರ ಶೇ.25-ಶೇ.30ರಷ್ಟು ಇಳಿಕೆ]]></title>
            <link>https://kannada.asianetnews.com/gallery/travel/indian-railways-trains-running-from-hubballi-to-vijayapura-will-now-be-regular-ticket-prices-reduced-mrq-hrg3rph</link>
            <guid isPermaLink="true">https://kannada.asianetnews.com/gallery/travel/indian-railways-trains-running-from-hubballi-to-vijayapura-will-now-be-regular-ticket-prices-reduced-mrq-hrg3rph</guid>
            <pubDate>Tue, 12 May 2026 07:27:48 +0530</pubDate>
            <description><![CDATA[ಹುಬ್ಬಳ್ಳಿಯಿಂದ ಯೋಗ ನಗರಿ ಋಷಿಕೇಶ್&zwnj; ಮತ್ತು ವಿಜಯಪುರಕ್ಕೆ ಸಂಚರಿಸುವ ಮೂರು ವಿಶೇಷ ರೈಲುಗಳನ್ನು ಕಾಯಂಗೊಳಿಸಲಾಗಿದೆ. ಇದರಿಂದಾಗಿ ಟಿಕೆಟ್ ದರಗಳು ಶೇ. 25-30 ರಷ್ಟು ಕಡಿಮೆಯಾಗಲಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krcy0seys5nwtfcj44rfm72q,imgname-indian-railways--1--1778550597086.jpg" type="image/jpeg" height="390" width="690"/>
            <content:encoded><![CDATA[ಹುಬ್ಬಳ್ಳಿಯಿಂದ ಯೋಗ ನಗರಿ ಋಷಿಕೇಶ್&zwnj; ಮತ್ತು ವಿಜಯಪುರಕ್ಕೆ ಸಂಚರಿಸುವ ಮೂರು ವಿಶೇಷ ರೈಲುಗಳನ್ನು ಕಾಯಂಗೊಳಿಸಲಾಗಿದೆ. ಇದರಿಂದಾಗಿ ಟಿಕೆಟ್ ದರಗಳು ಶೇ. 25-30 ರಷ್ಟು ಕಡಿಮೆಯಾಗಲಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ.&lt;img&gt;&lt;p&gt;ಹುಬ್ಬಳ್ಳಿ-ಯೋಗ ನಗರಿ ಋಷಿಕೇಶ್&zwnj; ಮಧ್ಯೆ ಸಂಚರಿಸುವ ರೈಲು ಸೇರಿದಂತೆ ಮೂರು ವಿಶೇಷ ರೈಲುಗಳನ್ನು ಕಾಯಂಗೊಳಿಸಿ ಸೋಮವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿಸಿದರು.&lt;/p&gt;&lt;img&gt;&lt;p&gt;ಈ ಮೊದಲು ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ- ಯೋಗನಗರಿ ಋಷಿಕೇಶ್&zwnj;- ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ (ಟ್ರೈನ್&zwnj; ಸಂಖ್ಯೆ- 17363/64) ವೀಕ್ಲಿ ಎಕ್ಸ್&zwnj;ಪ್ರೆಸ್&zwnj;, ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ-ವಿಜಯಪುರ-ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ (ಸಂಖ್ಯೆ 56919/20) ಪ್ಯಾಸೆಂಜರ್&zwnj;, ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ-ವಿಜಯಪುರ ಎಸ್&zwnj;ಎಸ್&zwnj;ಎಸ್&zwnj; ಹುಬ್ಬಳ್ಳಿ ಮೆಮೂ (ಸಂಖ್ಯೆ- 66501/02) ರೈಲುಗಳನ್ನು ಕಾಯಂ ಆಗಿ ಸಂಚರಿಸಲಿವೆ.&lt;/p&gt;&lt;img&gt;&lt;p&gt;ಈ ವೇಳೆ ಮಾತನಾಡಿದ ಕೇಂದ್ರ ಸಚಿವರು, ವಿಶೇಷ ರೈಲುಗಳು ನಿರಂತರವಾಗಿ ಸಂಚರಿಸಲಿವೆ. ಇದರಿಂದ ರಜಾ ದಿನಗಳಲ್ಲಿ ಟಿಕೆಟ್&zwnj; ಅಭಾವ ತಗ್ಗಲಿದೆ. ಟಿಕೆಟ್ ದರದಲ್ಲೂ ಸುಮಾರು ಶೇ.25ರಿಂದ 30ರಷ್ಟು ಇಳಿಕೆಯಾಗಲಿದೆ. ಇದರಿಂದ ಪ್ರಯಾಣಿಕರಿಗೆ ಲಾಭವಾಗಲಿದೆ.&lt;/p&gt;&lt;img&gt;&lt;p&gt;ಈ ರೈಲುಗಳ ಓಡಾಟದಿಂದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ವೇಳೆ ನೈಋತ್ಯ ರೈಲ್ವೆ ವಲಯದ ಮಹಾಪ್ರಬಂಧಕ ಪಿ. ಅನಂತ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ, ಸೇರಿದಂತೆ ಇನ್ನಿತರೆ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಶವಂತಪುರ -ವಿಜಯಪುರ-ಸಿಂಧನೂರು ​ರೈಲಿಗೆ ಜರ್ಮನ್ ತಂತ್ರಜ್ಞಾನ ; ಈಗ ಮತ್ತಷ್ಟು ಆರಾಮದಾಯಕ ಪ್ರಯಾಣ&lt;/strong&gt;&lt;/p&gt;&lt;img&gt;&lt;p&gt;ರೈಲುಗಳ ನಿಯಮಿತ ಸೇವೆಯಿಂದಾಗಿ ಪ್ರಯಾಣಿಕರಿಗೆ ಆರ್ಥಿಕವಾಗಿಯೂ ದೊಡ್ಡ ಲಾಭವಾಗಲಿದೆ. ಸಾಮಾನ್ಯ ದರ್ಜೆಯ ಪ್ರಯಾಣಿಕರಿಗೆ ಸೂಪರ್&zwnj;ಫಾಸ್ಟ್ ಹೆಚ್ಚುವರಿ ಶುಲ್ಕವಿರುವುದಿಲ್ಲ. ಮೀಸಲು ದರ್ಜೆಯ ಟಿಕೆಟ್ ದರದಲ್ಲಿ ಸುಮಾರು 30% ರಷ್ಟು ಕಡಿತವಾಗಲಿದ್ದು, ಪ್ರಯಾಣವು ಅತ್ಯಂತ ಕೈಗೆಟಕುವ ದರದಲ್ಲಿ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಭಾರತೀಯ ರೈಲ್ವೆಯ ಚಲಿಸುವ ನರಕ; ತಾಳ್ಮೆ, ಗುಂಡಿಗೆ ಗಟ್ಟಿ ಇದ್ರೆ ಮಾತ್ರ ಈ ರೈಲಿನಲ್ಲಿ ಪ್ರಯಾಣಿಸಿ&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/travel/indian-railways-trains-running-from-hubballi-to-vijayapura-will-now-be-regular-ticket-prices-reduced-mrq-hrg3rph"/>
        </item>
        <item>
            <title><![CDATA[Yogesh Gowda murder case : ಕೊಲೆ ದೋಷಿ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್; ಶಾಸಕತ್ವ ರದ್ದು!]]></title>
            <link>https://kannada.asianetnews.com/state/dharwad-yogesh-gowda-murder-case-vinay-kulkarni-s-mla-status-cancelled-rav/articleshow-hyf4abv</link>
            <guid isPermaLink="true">https://kannada.asianetnews.com/state/dharwad-yogesh-gowda-murder-case-vinay-kulkarni-s-mla-status-cancelled-rav/articleshow-hyf4abv</guid>
            <pubDate>Sun, 03 May 2026 05:20:43 +0530</pubDate>
            <description><![CDATA[&lt;p&gt;ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ, ಧಾರವಾಡ ಗ್ರಾಮಾಂತರ ಶಾಸಕ ವಿನಯ್&zwnj; ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ವಿಧಾನಸಭೆ ಕಾರ್ಯದರ್ಶಿ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jx3v3hk5gv0fm8w308yq6dp4,imgname-----------------------2025-06-07t053139.952-1749254522469.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮೇ.3): &lt;/strong&gt;ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್&zwnj; ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್&zwnj; ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.&lt;/p&gt;&lt;p&gt;ಈ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಈ ಮುಖಾಂತರ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಿದ್ದಾರೆ.&lt;/p&gt;&lt;p&gt;ನಗರದ 82ನೇ ಸಿಸಿಎಚ್&zwnj;(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ನ್ಯಾಯಾಲಯವು ಕೊಲೆ ಪ್ರಕರಣ ಸಂಬಂಧ ವಿನಯ್&zwnj; ಕಲುಕರ್ಣಿ ಅವರನ್ನು ದೋಷಿ ಎಂದು ನಿರ್ಧರಿಸಿ ಏ.15ರಂದು ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾದ ದಿನದಿಂದಲೇ ವಿನಯ್&zwnj; ಕುಲಕರ್ಣಿ ಅವರು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.&lt;/p&gt;&lt;p&gt;ಈ ಶಿಕ್ಷೆಗೆ ನ್ಯಾಯಾಲಯ ತಡೆಯಾಜ್ಞೆ ನೀಡದಿದ್ದಲ್ಲಿ 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್&zwnj; 8 ಮತ್ತು ಸಂವಿಧಾನದ ಸೆಕ್ಷನ್&zwnj; 191(1) (ಇ) ಪ್ರಕಾರ ಈ ಅನರ್ಹತೆ ವಿನಯ್&zwnj; ಕುಲಕರ್ಣಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ಆರು ವರ್ಷಗಳ ಅವಧಿಗೆ ಮುಂದುವರೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/dharwad-yogesh-gowda-murder-case-vinay-kulkarni-s-mla-status-cancelled-rav/articleshow-hyf4abv"/>
        </item>
        <item>
            <title><![CDATA[ರಾಜ್ಯದಲ್ಲಿ ಕಾಂಗ್ರೆಸ್‌ ವಿರುದ್ಧ ನಿರಂತರ ಹೋರಾಟ: ಬಿ.ವೈ.ವಿಜಯೇಂದ್ರ ಕಿಡಿ]]></title>
            <link>https://kannada.asianetnews.com/karnataka-districts/bjp-protest-womens-reservation-bill-congress-by-vijayendra-statement-gvd/articleshow-irgl9ok</link>
            <guid isPermaLink="true">https://kannada.asianetnews.com/karnataka-districts/bjp-protest-womens-reservation-bill-congress-by-vijayendra-statement-gvd/articleshow-irgl9ok</guid>
            <pubDate>Sat, 02 May 2026 23:25:51 +0530</pubDate>
            <description><![CDATA[&lt;p&gt;ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್&zwnj; ವಿಂಗಡಣೆ ವಿಷಯದಲ್ಲಿ ಜನರನ್ನು ಹಾದಿ ತಪ್ಪಿಸಿರುವ ಕಾಂಗ್ರೆಸ್&zwnj; ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಿರಂತರ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01hyt6908xnsswg7jxa96ttjf6,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಮೇ.02): &lt;/strong&gt;ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್&zwnj; ವಿಂಗಡಣೆ ವಿಷಯದಲ್ಲಿ ಜನರನ್ನು ಹಾದಿ ತಪ್ಪಿಸಿರುವ ಕಾಂಗ್ರೆಸ್&zwnj; ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಿರಂತರ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳು ಭಯದಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ ನೇಹಾ ಹಿರೇಮಠ, ಉತ್ತರ ಕನ್ನಡದ ದಲಿತ ಯುವತಿಯ ಮೇಲೆ ನಡೆದ ದೌರ್ಜನ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದರು.&lt;/p&gt;&lt;p&gt;ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್&zwnj; ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಪ್ರತಿನಿತ್ಯ ಕೊಲೆ, ಸುಲಿಗೆ, ಲವ್&zwnj; ಜಿಹಾದ್&zwnj;, ನಡೆಯುತ್ತಲೇ ಇವೆ. ರಾಜ್ಯದಲ್ಲಿ ಕೊಲೆ ಸುಲಿಗೆ ಪ್ರತಿ ದಿನ ಲವ್ ಜಿಹಾದ್, ಮಹಿಳಾ ಹ*ತ್ಯೆಗಳು ನಡೆಯುತ್ತಿವೆ. ನಮ್ಮ ಮಹಿಳೆಯರು ಜೈಪುರ, ಮುಂಬೈಗೆ ಹೋಗುತ್ತಿದ್ದಾರೆ. ನಮ್ಮ ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಕೆಲಸಕ್ಕೆ ಹೋದರೆ ಸಂಜೆ ಮನೆಗೆ ಬರುವ ಭರವಸೆ ಇಲ್ಲ.&lt;/p&gt;&lt;p&gt;ರಾಜ್ಯದಲ್ಲಿ ಅನೀತಿ, ಅತ್ಯಾಚಾರ ನಿಲ್ಲಬೇಕಾದರೆ ನಮ್ಮ ರಕ್ಷಣೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ನಮಗೆ ಅಧಿಕಾರ ಕೊಡಿ, ವಿಧಾನಸಭೆ, ಲೋಕಸಭೆಯಲ್ಲಿ ಸ್ಥಾನ ಕೊಡಿ ಎಂದು ನಾರಿ ಶಕ್ತಿ ಕೂಗಿ ಕೂಗಿ ಹೇಳುತ್ತಿದೆ ಎಂದು ಹೇಳಿದರು. ವಿಧಾನ ಪರಿಷತ್&zwnj; ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ವಿಪಕ್ಷಗಳು ಮಹಿಳಾ ವಿಧೇಯಕವನ್ನು ಸೋಲಿಸುವ ಮೂಲಕ ತಮ್ಮ ಮಹಿಳಾ ವಿರೋಧಿ ನೀತಿಯನ್ನು ಸಾಬೀತು ಮಾಡಿವೆ. ಮುಂಬರುವ ದಿನಗಳಲ್ಲಿ ಇಂತಹ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.&lt;/p&gt;&lt;h2&gt;&lt;strong&gt;ಮಸೂದೆಗೆ ಸೋಲಾಗಿದೆ ಎಂದು ಧೃತಿಗೆಡಬೇಡಿ&lt;/strong&gt;&lt;/h2&gt;&lt;p&gt;ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ ಎಂದು ಧೃತಿಗೆಡಬೇಡಿ. ಈ ಮಸೂದೆ ಇದೇ ಅವಧಿಯಲ್ಲಿ ಜಾರಿಗೆ ಬರುತ್ತೆ. ಮುಂದಿಟ್ಟ ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ. ಮಹಿಳಾ ಮೀಸಲಾತಿ ಜಾರಿಗೆ ತರುವುದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ! ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಜಾರಿಗೆ ತರಲೇಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಮೋದಿ ಅವರು ಮುಂದಿಟ್ಟು ಹೆಜ್ಜೆ ಎಂದೂ ಹಿಂದೆ ಇಟ್ಟ ಉದಾಹರಣೆಯೇ ಇಲ್ಲ. ಮಹಿಳಾ ಮೀಸಲಾತಿ ಜಾರಿಗೆ ತಂದೇ ತರುತ್ತಾರೆ. ಈ ಬಗ್ಗೆ ಯಾವುದೇ ಸಂಶಯ ಬೇಡ.&lt;/p&gt;&lt;p&gt;ಮಹಿಳಾ ಮೀಸಲಾತಿ ಜಾರಿಗೊಳಿಸುವುದನ್ನು ತಡೆಯುವ ಶಕ್ತಿ ಕಾಂಗ್ರೆಸ್&zwnj; ಅಲ್ಲ. ಯಾರಿಗೂ ಇಲ್ಲ ಎಂದರು. ದೇಶ ಅಭಿವೃದ್ಧಿಶೀಲ ರಾಷ್ಟ್ರವಾಗಬೇಕಾದರೆ, ನಾರಿಶಕ್ತಿ ಪಾತ್ರ ದೊಡ್ಡದು ಎಂದು ಮೋದಿ ಅವರು ಬಲವಾಗಿ ನಂಬಿದ್ದಾರೆ. ಅದೇ ಕಾರಣಕ್ಕೆ ಅವರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಬಯಕೆ ಹೊಂದಿದ್ದರು. ಆದರೆ, ಕಾಂಗ್ರೆಸ್ ಆ ಮಸೂದೆಯನ್ನು ಸೋಲಿಸುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡುವ ಕೆಲಸ ಮಾಡಿದೆ ಎಂದು ಆರೋಪಿಸಿದರು.&lt;/p&gt;]]></content:encoded>
            <category>dharwad</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/bjp-protest-womens-reservation-bill-congress-by-vijayendra-statement-gvd/articleshow-irgl9ok"/>
        </item>
        <item>
            <title><![CDATA[Hubballi horror: ತಂಗಿಯರ ಫೋಟೋ ತೆಗೆಯಬೇಡ ಎಂದಿದ್ದಕ್ಕೆ ಪತ್ನಿ, 6 ತಿಂಗಳ ಮಗು ಸೇರಿ ಐವರ ಮೇಲೆ ಪತಿಯಿಂದ ಆಸಿಡ್ ದಾಳಿ!]]></title>
            <link>https://kannada.asianetnews.com/karnataka-districts/hubballi-horror-acid-attack-on-five-people-including-a-6-month-old-baby-rav/articleshow-kx5hvc4</link>
            <guid isPermaLink="true">https://kannada.asianetnews.com/karnataka-districts/hubballi-horror-acid-attack-on-five-people-including-a-6-month-old-baby-rav/articleshow-kx5hvc4</guid>
            <pubDate>Sun, 10 May 2026 09:28:59 +0530</pubDate>
            <description><![CDATA[ಹುಬ್ಬಳ್ಳಿ ತಾಲೂಕಿನ ತಾರಿಹಾಳದಲ್ಲಿ, ತಂಗಿಯರ ಫೋಟೋ ತೆಗೆಯಬೇಡ ಎಂದ ಪತ್ನಿಯನ್ನು ಧಿಕ್ಕರಿಸಿ ಫೋಟೋ ತೆಗೆದಿದ್ದಕ್ಕೆ ನಡೆದ ಜಗಳದಲ್ಲಿ ಪತಿಯು ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮಗು ಸೇರಿದಂತೆ ಐವರು ಗಾಯಗೊಂಡಿದ್ದು, ದಾಳಿಕೋರ ಪತಿ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7zse5fgt6wpkmskb2ssevy,imgname-----------------------2026-05-10t091414.121-1778384681135.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಮೇ.10):&lt;/strong&gt; ಹೆಂಡತಿಯು ತನ್ನ ಇಬ್ಬರು ತಂಗಿಯರ ಫೋಟೋ ತೆಗೆಯಬೇಡ ಎಂದು ಗಂಡನಿಗೆ ಹೇಳಿದಾಗ್ಯೂ ಧಿಕ್ಕರಿಸಿ ಫೋಟೋ ತೆಗೆದಿದ್ದಕ್ಕೆ ದಂಪತಿ ಮಧ್ಯೆ ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಸೇರಿ ಕುಟುಂಬಸ್ಥರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳದ ವಾಜಪೇಯಿ ನಗರದಲ್ಲಿ ಶನಿವಾರ ನಡೆದಿದೆ.&lt;/p&gt;&lt;p&gt;ಘಟನೆಯಲ್ಲಿ ಮಗು ಸೇರಿ ಐವರು ಗಾಯಗೊಂಡಿದ್ದು, ಅವರನ್ನು ಕೆಎಂಸಿಆರ್&zwnj;ಐಗೆ ದಾಖಲಿಸಲಾಗಿದೆ. ಸುರೇಶ ಬೈಲಪತ್ತಾರ (33), ಈತನ ಪತ್ನಿ ರಾಜೇಶ್ವರಿ ಬೈಲಪತ್ತಾರ (24), ಪತ್ನಿಯ ತಂಗಿಯರಾದ ಶ್ರುತಿ, ರೇಷ್ಮಾ ಹಾಗೂ 6 ತಿಂಗಳ ಮಗುವಿನ ಮೇಲೆ ಆ್ಯಸಿಡ್ ಬಿದ್ದು ಗಂಭೀರ ಗಾಯವಾಗಳಾಗಿವೆ. ಗಾಯಾಳುಗಳನ್ನು ಕೆಎಂಸಿಆರ್&zwnj;ಐ ಆಸ್ಪತ್ರೆಗೆ ದಾಖಲಿಸಿದ್ದು, ಸುರೇಶ ಬೈಲಪತ್ತಾರ ಹಾಗೂ ರಾಜೇಶ್ವರಿ ಅವರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.&lt;/p&gt;&lt;h2&gt;ಏನಿದು ಘಟನೆ?:&lt;/h2&gt;&lt;p&gt;ತಾರಿಹಾಳದ ವಾಜಪೇಯಿ ನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿರುವ ಸುರೇಶ ಬೈಲಪತ್ತಾರ ಹಿತ್ತಾಳೆ, ತಾಮ್ರದ ಕೆಲಸ ಮಾಡಿಕೊಂಡಿದ್ದಾನೆ. ನಾದಿನಿಯರ ವಿಚಾರವಾಗಿ ಸುರೇಶ ಮತ್ತವನ ಪತ್ನಿ ರಾಜೇಶ್ವರಿ ನಡುವೆ ಜಗಳ ನಡೆದಿದೆ. ನಾದಿನಿಯರ ಫೋಟೋ ತೆಗೆಯದಂತೆ ಗಂಡನಿಗೆ ರಾಜೇಶ್ವರಿ ತಾಕೀತು ಮಾಡಿದ್ದಳು. ಈ ಮಧ್ಯೆಯೂ ಫೋಟೋ ತೆಗೆದು ಸುರೇಶ ಕಿರಿಕ್ ಮಾಡಿದ್ದು, ಇದೇ ವಿಚಾರವಾಗಿ ಜಗಳ ವಿಕೋಪಕ್ಕೆ ಹೋಗಿದೆ ಎನ್ನಲಾಗಿದೆ.&lt;/p&gt;&lt;h3&gt;ಪತ್ನಿ ಮಗು ಮೇಲೆ ಆಸಿಡ್ ದಾಳಿ!&lt;/h3&gt;&lt;p&gt;ಜಗಳ ವಿಕೋಪಕ್ಕೆ ತಿರುಗಿದಾಗ ಮನೆಯಲ್ಲಿದ್ದ ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್ (ಆ್ಯಸಿಡ್)ನಿಂದ ಪತ್ನಿ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಆತನ ಮೇಲೂ ಆ್ಯಸಿಡ್ ಬಿದ್ದು ಗಾಯಗೊಂಡಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hubballi-horror-acid-attack-on-five-people-including-a-6-month-old-baby-rav/articleshow-kx5hvc4"/>
        </item>
        <item>
            <title><![CDATA[ಕಲಘಟಗಿ ಪಟ್ಟಣ ಪಂಚಾಯ್ತಿ ಜನರಿಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಲಾಡ್; ಜೂ.15ರಂದು ಮಹತ್ವದ ದಿನ]]></title>
            <link>https://kannada.asianetnews.com/karnataka-districts/continuous-water-project-to-supply-drinking-water-begins-in-kalaghatagi-town-panchayat-limits-minister-santosh-lad-mrq/articleshow-llw1k7h</link>
            <guid isPermaLink="true">https://kannada.asianetnews.com/karnataka-districts/continuous-water-project-to-supply-drinking-water-begins-in-kalaghatagi-town-panchayat-limits-minister-santosh-lad-mrq/articleshow-llw1k7h</guid>
            <pubDate>Wed, 13 May 2026 09:24:45 +0530</pubDate>
            <description><![CDATA[&lt;p&gt;ಕಲಘಟಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜೂನ್ 15 ರಿಂದ 24/7 ಕುಡಿಯುವ ನೀರು ಸರಬರಾಜು ಮಾಡುವ ನಿರಂತರ ನೀರು ಯೋಜನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಘೋಷಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krfqh8fzbv1efrmd552zrvx8,imgname-santosh-lad-1778644460031.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ:&lt;/strong&gt; ಕಲಘಟಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ 17 ವಾರ್ಡ್&zwj;ಗಳಿಗೆ 24/7 ಕುಡಿಯುವ ನೀರು ಸರಬರಾಜು ಮಾಡುವ ನಿರಂತರ ನೀರು ಯೋಜನೆ ಜೂ. 15ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.&lt;/p&gt;&lt;p&gt;ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ಬೇಸಿಗೆಯಲ್ಲಿ ಕುಡಿಯುವ ನೀರು, ಜಾನುವಾರು ಮೇವು ಹಾಗೂ ಅಕಾಲಿಕ ಮಳೆಯಿಂದ ಆಗಿರುವ ಹಾನಿ ಮತ್ತು ಪರಿಹಾರ ಕೈಗೊಂಡಿರುವ ಕುರಿತು ಪರಿಶೀಲಿಸಿ ಮಾತನಾಡಿದರು.&lt;/p&gt;&lt;p&gt;ಕಲಘಟಗಿ ಪಪಂ ವ್ಯಾಪ್ತಿಯಲ್ಲಿ 19 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ನಿತ್ಯ 3 ಎಂಎಲ್&zwnj;ಡಿ ನೀರು ಸರಬರಾಜು ಮಾಡಲಾಗುತ್ತಿದೆ. 24 ಗಂಟೆ ಕುಡಿಯುವ ನೀರು ಸರಬರಾಜು ಮಾಡುವ ₹ 35.38 ಕೋಟಿ ವೆಚ್ಚದ ನಿರಂತರ ನೀರು ಯೋಜನೆ ಕಾಮಗಾರಿಯು ಮೇ 18, 2024ರಂದು ಆರಂಭವಾಗಿದ್ದು, ಏ. 24, 2026ಕ್ಕೆ ಮುಕ್ತಾಯವಾಗುವ ಒಪ್ಪಂದವಾಗಿತ್ತು. ಗುತ್ತಿಗೆದಾರ ವಿಸ್ತರಣಾ ಅವಧಿ ಪಡೆದು, ಪ್ರಸ್ತಕ ತಿಂಗಳು ಕಾಮಗಾರಿ ಮುಕ್ತಾಯಗೊಳ್ಳುತ್ತಿದ್ದು ಜೂ. 15ರಿಂದ ಆರಂಭಿಸಲಾಗುವುದು ಎಂದರು.&lt;/p&gt;&lt;p&gt;ಅಣ್ಣಿಗೇರಿ, ನವಲಗುಂದ, ಕುಂದಗೋಳ ಪಟ್ಟಣದಲ್ಲೂ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, 24/7 ನೀರು ಪೂರೈಸಲಾಗುವುದು ಎಂದ ಅವರು, ವರದಿ ಪ್ರಕಾಣ ಜಿಲ್ಲೆಯ ಎಲ್ಲ ಪಟ್ಟಣಗಳ ಬಹುತೇಕ ವಾರ್ಡ್&zwnj;ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಕೆಲವೆಡೆ ತಾಂತ್ರಿಕ ಕಾರಣಗಳಿದ್ದು, ಅವುಗಳನ್ನು ಪರಿಹರಿಸಿ ಸುಗಮ ಮತ್ತು ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸಚಿವರು ಸೂಚಿಸಿದರು.&lt;/p&gt;&lt;h2&gt;&lt;strong&gt;ವ್ಯವಸ್ಥೆ ಸುಧಾರಣೆ&lt;/strong&gt;&lt;/h2&gt;&lt;p&gt;ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಸುಧಾರಣೆಗೊಂಡಿದೆ. ಇಂತಹ ಬೇಸಿಗೆ ಸಮಯದಲ್ಲಿಯೂ ಪಾಲಿಕೆ ವ್ಯಾಪ್ತಿಯಲ್ಲಿ 4ರಿಂದ 5 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿಂದೆ 8, 10, 15 ದಿನಗಳಿಗೆ ಇದ್ದ ಸರಬರಾಜು ವ್ಯವಸ್ಥೆ ಈಗ 4 ದಿನಕ್ಕೆ ಬಂದಿದೆ. ಆದಷ್ಟು ಶೀಘ್ರ ಅವಳಿ ನಗರದಲ್ಲಿ ನಿರಂತರ ನೀರು ಯೋಜನೆ ಆರಂಭವಾಗಲಿದೆ ಎಂದರು.&lt;/p&gt;&lt;h3&gt;&lt;strong&gt;ಬೀಜ-ಗೊಬ್ಬರ ದಾಸ್ತಾನು ಇರಲಿ&lt;/strong&gt;&lt;/h3&gt;&lt;p&gt;ಮುಂಗಾರು ಹಂಗಾಮು ಆಗಮಿಸುತ್ತಿದ್ದು ಬೇಡಿಕೆ ತಕ್ಕಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಅವಳಿ ನಗರದ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಹಾಗೂ ಮೂಲ ಸೌಕರ್ಯಗಳ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದರು.&lt;/p&gt;&lt;h3&gt;&lt;strong&gt;16 ಗ್ರಾಮಕ್ಕೆ ಕೊಳವೆಬಾವಿ ನೀರು&lt;/strong&gt;&lt;/h3&gt;&lt;p&gt;ಧಾರವಾಡ, ಹುಬ್ಬಳ್ಳಿ ಮತ್ತು ಕಲಘಟಗಿ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಬೇಲೂರ, ಮುಗದ, ಮನಗುಂಡಿ, ಲೋಕೂರು ಮತ್ತು ಹುಬ್ಬಳ್ಳಿ ತಾಲೂಕಿನ ನೂಲ್ವಿ, ಅದರಗುಂಚಿ, ಕುರ್ಡಿಕೆರೆ, ಛಬ್ಬಿ ಹಾಗೂ ಕಲಘಟಗಿ ತಾಲೂಕಿನ ನೆಲ್ಲಹರವಿ ತಾಂಡ, ಬಿ. ಹುಲಿಕಟ್ಟಿ, ದ್ಯಾಮನಕೊಂಡ, ಮುಕ್ಕಲ, ಹಿರೇ ಹುನಸಿಕಟ್ಟಿ, ಕುಡಲಗಿ ಗ್ರಾಮಗಳು ಸೇರಿದಂತೆ ಒಟ್ಟು 16 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದರು.&lt;/p&gt;&lt;p&gt;ಸಭೆಯಲ್ಲಿ ಜಿಪಂ ಸಿಇಒ ಭುವನೇಶ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಎಡಿಸಿ ಗೀತಾ ಸಿ.ಡಿ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/continuous-water-project-to-supply-drinking-water-begins-in-kalaghatagi-town-panchayat-limits-minister-santosh-lad-mrq/articleshow-llw1k7h"/>
        </item>
        <item>
            <title><![CDATA[ಉತ್ತರ ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಬೆಳಗಾವಿ - ಚರ್ಲಪಲ್ಲಿ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಖಾಯಂ!]]></title>
            <link>https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r</link>
            <guid isPermaLink="true">https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r</guid>
            <pubDate>Thu, 14 May 2026 20:21:50 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕ ಮತ್ತು ತೆಲಂಗಾಣ ನಡುವಿನ ಸಂಪರ್ಕವನ್ನು ಬಲಪಡಿಸಲು, ಚರ್ಲಪಲ್ಲಿ &ndash; ಬೆಳಗಾವಿ ನಡುವೆ ಸಂಚರಿಸುತ್ತಿದ್ದ ವಿಶೇಷ ವಾರಕ್ಕೊಮ್ಮೆ ಎಕ್ಸ್&zwnj;ಪ್ರೆಸ್ ರೈಲನ್ನು ರೈಲ್ವೆ ಮಂಡಳಿ ಖಾಯಂಗೊಳಿಸಿದೆ. ಈ ರೈಲು (17075/17076) ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ ಮಾರ್ಗವಾಗಿ ಸಂಚರಿಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krkf4pgtkqtym9st7j84f764,imgname-belagavi-charlapalli-weekly-express-train-1778769877529.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕ ಮತ್ತು ತೆಲಂಗಾಣ ನಡುವಿನ ಸಂಪರ್ಕವನ್ನು ಬಲಪಡಿಸಲು, ಚರ್ಲಪಲ್ಲಿ &ndash; ಬೆಳಗಾವಿ ನಡುವೆ ಸಂಚರಿಸುತ್ತಿದ್ದ ವಿಶೇಷ ವಾರಕ್ಕೊಮ್ಮೆ ಎಕ್ಸ್&zwnj;ಪ್ರೆಸ್ ರೈಲನ್ನು ರೈಲ್ವೆ ಮಂಡಳಿ ಖಾಯಂಗೊಳಿಸಿದೆ. ಈ ರೈಲು (17075/17076) ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ ಮಾರ್ಗವಾಗಿ ಸಂಚರಿಸಲಿದೆ.&lt;/p&gt;&lt;img&gt;&lt;p&gt;ಬೆಳಗಾವಿ/ಹುಬ್ಬಳ್ಳಿ (ಮೇ 14): ಉತ್ತರ ಕರ್ನಾಟಕದ ಜನತೆಗೆ ತೆಲಂಗಾಣ ರಾಜಧಾನಿ ಹೈದರಾಬಾದ್ ಸಮೀಪದ ಚರ್ಲಪಲ್ಲಿಗೆ ಸಂಚರಿಸಲು ಈಗ ರೈಲ್ವೆ ಇಲಾಖೆಯು ಸುಗಮ ಹಾದಿ ಮಾಡಿಕೊಟ್ಟಿದೆ. ಇದುವರೆಗೆ ವಿಶೇಷ ರೈಲಾಗಿ ಸಂಚರಿಸುತ್ತಿದ್ದ ಚರ್ಲಪಲ್ಲಿ &ndash; ಬೆಳಗಾವಿ &ndash; ಚರ್ಲಪಲ್ಲಿ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್&zwnj;ಪ್ರೆಸ್ ರೈಲನ್ನು (Weekly Express) ರೈಲ್ವೆ ಮಂಡಳಿಯು ಅಧಿಕೃತವಾಗಿ ಖಾಯಂಗೊಳಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದಾಗಿ ಉಭಯ ರಾಜ್ಯಗಳ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಗೊಂಡಿದೆ.&lt;/p&gt;&lt;img&gt;&lt;p&gt;ರೈಲ್ವೆ ಇಲಾಖೆಯ ಮಾಹಿತಿಯ ಪ್ರಕಾರ, ರೈಲು ಸಂಖ್ಯೆ 17075 (ಚರ್ಲಪಲ್ಲಿ - ಬೆಳಗಾವಿ) ಮೇ 16, 2026 ರಿಂದ ಜಾರಿಗೆ ಬರುವಂತೆ ವಾರಕ್ಕೊಮ್ಮೆ ಸಂಚರಿಸಲಿದೆ. ಹಾಗೆಯೇ, ರೈಲು ಸಂಖ್ಯೆ 17076 (ಬೆಳಗಾವಿ - ಚರ್ಲಪಲ್ಲಿ) ಮೇ 17, 2026 ರಿಂದ ಖಾಯಂ ಆಗಿ ಸಂಚರಿಸಲಿದೆ. ಈ ರೈಲು ಒಟ್ಟು 24 ಬೋಗಿಗಳನ್ನು (Coaches) ಹೊಂದಿರಲಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಈ ರೈಲು ಕರ್ನಾಟಕದ ಪ್ರಮುಖ ನಗರಗಳಾದ ಯಾದಗಿರಿ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಹುಬ್ಬಳ್ಳಿ, ಧಾರವಾಡ ಮತ್ತು ಲೋಂಡಾ ಮಾರ್ಗವಾಗಿ ಸಂಚರಿಸುತ್ತದೆ. ಅಲ್ಲದೆ, ಧಾರ್ಮಿಕ ಕೇಂದ್ರವಾದ ಮಂತ್ರಾಲಯಕ್ಕೂ ಈ ರೈಲಿನ ಸಂಪರ್ಕ ಇರುವುದರಿಂದ ಭಕ್ತಾದಿಗಳಿಗೆ ಭಾರಿ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಚರ್ಲಪಲ್ಲಿಯಿಂದ ಬೆಳಗಾವಿಗೆ (17075): ಸಂಜೆ 4:00 ಗಂಟೆಗೆ ಚರ್ಲಪಲ್ಲಿಯಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.&lt;/p&gt;&lt;p&gt;ಬೆಳಗಾವಿಯಿಂದ ಚರ್ಲಪಲ್ಲಿಗೆ (17076): ಮಧ್ಯಾಹ್ನ 1:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 08:45ಕ್ಕೆ ಚರ್ಲಪಲ್ಲಿ ತಲುಪಲಿದೆ.&lt;/p&gt;&lt;img&gt;&lt;p&gt;ಬೆಳಗಾವಿ, ಧಾರವಾಡ ಮತ್ತು ಹುಬ್ಬಳ್ಳಿ ಭಾಗದ ಜನರು ಹೈದರಾಬಾದ್ ಕಡೆಗೆ ಹೋಗಲು ಈ ರೈಲು ಅತ್ಯಂತ ಸಹಕಾರಿಯಾಗಿದೆ. ಅದರಲ್ಲೂ ವಾರಾಂತ್ಯದಲ್ಲಿ ಸಂಚರಿಸುವವರಿಗೆ ಇದು ವರದಾನವಾಗಲಿದೆ. ವ್ಯಾಪಾರಸ್ಥರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಈ ರೈಲಿನ ಖಾಯಂ ಸೇವೆಯಿಂದಾಗಿ ನಿರಂತರವಾಗಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ದೊರೆಯಲಿದೆ.&lt;/p&gt;&lt;p&gt;ಪ್ರಯಾಣಿಕರು ರೈಲಿನ ಹೆಚ್ಚಿನ ವಿವರಗಳು ಮತ್ತು ನಿಖರವಾದ ವೇಳಾಪಟ್ಟಿಗಾಗಿ ಅಧಿಕೃತ ವೆಬ್&zwnj;ಸೈಟ್ www.enquiry.indianrail.gov.in ಅಥವಾ NTES ಆಪ್ ಅನ್ನು ಬಳಸಬಹುದು. ನೈಋತ್ಯ ರೈಲ್ವೆಯ ಈ ಜನಸ್ನೇಹಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railways-good-news-to-north-karnataka-belagavi-charlapalli-weekly-express-train-regularised-sat-nnqhq4r"/>
        </item>
        <item>
            <title><![CDATA[Dharwad: ಮುಂಡಗೋಡ ಮೂಲದ ಬೌದ್ಧ ಸನ್ಯಾಸಿ ಕೊಲೆ ರಹಸ್ಯ: ಒಂದೇ ಸುಳಿವು ಬಿಚ್ಚಿಟ್ಟ ಸತ್ಯ!]]></title>
            <link>https://kannada.asianetnews.com/karnataka-districts/mundagoda-based-buddhist-monk-tashi-dhondup-murder-case-update-three-accused-arrested-by-dharwad-police-mrq/articleshow-oowg67i</link>
            <guid isPermaLink="true">https://kannada.asianetnews.com/karnataka-districts/mundagoda-based-buddhist-monk-tashi-dhondup-murder-case-update-three-accused-arrested-by-dharwad-police-mrq/articleshow-oowg67i</guid>
            <pubDate>Tue, 05 May 2026 07:58:04 +0530</pubDate>
            <description><![CDATA[&lt;p&gt;ಮುಂಡಗೋಡ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಕೊಲ್ಲಾಪುರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಏ. 28ರಂದು ಗ್ರಾಮೀಣ ಠಾಣೆ ವ್ಯಾಪ್ತಿಯ ಇಲ್ಲಿಯ ಬೈಪಾಸ್&zwnj;ನ ಹಳಿಯಾಳ ರಸ್ತೆ ಸೇತುವೆ ಕೆಳಗೆ ಶವ ಪತ್ತೆಯಾಗಿತ್ತು&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqtyzez46m4ygyx3mzj36th5,imgname-monk-murder--1--1777947622372.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ:&lt;/strong&gt; ಮುಂಡಗೋಡ ಮೂಲದ ಬೌದ್ಧ ಸನ್ಯಾಸಿಯ ಕೊಲೆ ಪ್ರಕರಣವನ್ನು ಗ್ರಾಮೀಣ ಠಾಣೆಯ ಪೊಲೀಸರು ಬೇಧಿಸಿದ್ದು, ಐವರು ಆರೋಪಿಗಳ ಪೈಕಿ 18 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.&lt;/p&gt;&lt;p&gt;ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಟ್ಟೇಹಳ್ಳಿಯ ಬೌದ್ಧ ಸನ್ಯಾಸಿ ತಾಶಿ ಧೊಂದೂಪ (40) ಶವ ಏ. 28ರಂದು ಗ್ರಾಮೀಣ ಠಾಣೆ ವ್ಯಾಪ್ತಿಯ ಇಲ್ಲಿಯ ಬೈಪಾಸ್&zwnj;ನ ಹಳಿಯಾಳ ರಸ್ತೆ ಸೇತುವೆ ಕೆಳಗೆ ಪತ್ತೆಯಾಗಿತ್ತು. ಇದು ಕೊಲೆ ಎಂದು ಗೊತ್ತಾದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸರು ಎಂಟು ತಂಡಗಳನ್ನು ರಚಿಸಿ ವಾರದೊಳಗೆ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಗುಂಜನ್&zwnj; ಆರ್ಯ ಮಾಹಿತಿ ನೀಡಿದರು.&lt;/p&gt;&lt;h2&gt;&lt;strong&gt;ಆರೋಪಿಗಳಿವರು&lt;/strong&gt;&lt;/h2&gt;&lt;p&gt;ಸಂಕೇತ ಸತ್ಯಪ್ಪ ಯಾದವ (24), ವೈಭವ ಮಾರುತಿ ಚವ್ಹಾಣ (30) ಹಾಗೂ ಓರ್ವ ಅಪ್ರಾಪ್ತ ಕೊಲೆ ಆರೋಪಿಗಳಾಗಿದ್ದು, ಇನ್ನೂ ಇಬ್ಬರು ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.&lt;/p&gt;&lt;p&gt;ಕೊಲೆ ಮಾಡಿದ ಎಲ್ಲ ಆರೋಪಿಗಳು ಕೊಲ್ಲಾಪೂರ ಮೂಲದವರಾಗಿದ್ದು, ಹಣಕ್ಕಾಗಿ ಈ ದುಷ್ಕೃತ್ಯ ಎಸಗಿದ್ದಾರೆ. ಕಬ್ಬು ಕಟಾವು ಸೇರಿ ಬೇರೆ ಬೇರೆ ಕೆಲಸಕ್ಕಾಗಿ ಈ ಮುಂಚೆ ಆಗಾಗ ಮುಂಡಗೋಡಕ್ಕೆ ಆರೋಪಿಗಳು ಬರುತ್ತಿದ್ದರು. ಮುಂಡಗೋಳ ಸ್ಥಳದ ಪರಿಚಯವಿತ್ತು. ಹಣದ ಅವಶ್ಯಕತೆ ಆರೋಪಿಗಳಿಗೆ ಹೆಚ್ಚಿದ್ದ ಕಾರಣ ಏ. 28ರಂದು ಕೊಲ್ಲಾಪುರದಿಂದ ಕಾರಿನಲ್ಲಿ ಬಂದಿದ್ದಾರೆ. ಮುಂಡಗೋಡ ಕ್ಯಾಂಪ್&zwnj;ನಲ್ಲಿ ಅಂದು ಮೂವರ ಮೇಲೆ ಹಲ್ಲೆ ನಡೆಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ವಿಫಲ ಯತ್ನವಾದ ಬಳಿಕ ಕೊಲೆಯಾದ ತಾಶಿ ದೊಂದೊಪ ಅವರನ್ನು ಅಪಹರಿಸಿ ಹಣ ಕೇಳಿದ್ದಾರೆ.&lt;/p&gt;&lt;p&gt;ಈ ಸಂದರ್ಭದಲ್ಲಿ ಕೈಕಾಲು ಕಟ್ಟಿ ತೀವ್ರವಾಗಿ ಹಲ್ಲೆ ನಡೆಸಿದಾಗ ತಾಶಿ ಅವರ ಮೂಗಿಗೆ ಬಲವಾಗಿ ಪೆಟ್ಟು ಬಿದ್ದು ಉಸಿರಾಟ ಸಮಸ್ಯೆಯಿಂದ ಕಾರಿನಲ್ಲಿಯೇ ತಾಶಿ ಮೃತಪಟ್ಟಿದ್ದಾರೆ.&lt;/p&gt;&lt;h3&gt;&lt;strong&gt;ಸಿಸಿ ಕ್ಯಾಮೆರಾ ಪರಿಶೀಲನೆ&lt;/strong&gt;&lt;/h3&gt;&lt;p&gt;ಮುಂಡಗೋಡದಿಂದ ಶವವನ್ನು ಕಾರಿನಲ್ಲಿಯೇ ತಂದಿರುವ ಆರೋಪಿಗಳು ಹಳಿಯಾಳ ಸೇತುವೆ ಬಳಿ ಎಸೆದು ಬೈಪಾಸ್&zwnj; ಮೂಲಕ ಕೊಲ್ಲಾಪೂರಕ್ಕೆ ಹೋಗಿದ್ದಾರೆ.&lt;/p&gt;&lt;p&gt;ಆರೋಪಿಗಳನ್ನು ಇಷ್ಟು ಶೀಘ್ರ ಪತ್ತೆ ಮಾಡಲು ಅವರು ಬಳಸಿದ ಸಿಎನ್&zwnj;ಜಿ ಕಾರು ಪ್ರಮುಖ ಪಾತ್ರ ವಹಿಸಿದೆ. ಮುಂಡಗೋಡದಿಂದ ಕೊಲ್ಲಾಪೂರ ವರೆಗೆ ಸುಮಾರು 30ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿ ಕೊನೆಗೆ ಆರೋಪಿಗಳನ್ನು ಪತ್ತೆ ಹಚ್ಚಲಾಯಿತು. ಪರಿಶೀಲನೆ ವೇಳೆ ಕಾರು ಅಸ್ಪಷ್ಟವಾಗಿ ಪತ್ತೆಯಾಗಿತ್ತು. ಆದರೆ, ಆರೋಪಿಗಳು ಯಾರೆಂದು ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಕಾರುಗಳಿಗೆ ಸಿಎನ್&zwnj;ಜಿ ಹಾಕಿಸಿಕೊಳ್ಳುವಾಗ ಕಾರಿನಲ್ಲಿದ್ದ ಎಲ್ಲರನ್ನು ಇಳಿಸಲಾಗುತ್ತದೆ. ಅಂತೆಯೇ, ಕೊಲೆ ಮಾಡಿ ಶವವನ್ನು ಕಾರಿನಲ್ಲಿಯೇ ಹಾಕಿಕೊಂಡು ಕೊಲ್ಲಾಪೂರಕ್ಕೆ ಹೋಗುವಾಗ ಕಲಘಟಗಿ ಬಳಿ ಸಿಎನ್&zwnj;ಜಿ ಪಂಪ್&zwnj;ನಲ್ಲಿ ಈ ಎಲ್ಲ ಆರೋಪಿಗಳು ಕೆಳಗೆ ಇಳಿದಿದ್ದು, ಇದು ಸಿಸಿ ಟಿವಿ ಮೂಲಕ ಗೊತ್ತಾಯಿತು. ಹೀಗಾಗಿ ಆರೋಪಿಗಳನ್ನು ಪತ್ತೆ ಹಚ್ಚಲು ತುಂಬ ಸುಲಭವಾಯಿತು ಎಂದು ಗುಂಜನ ಆರ್ಯ ಮಾಹಿತಿ ನೀಡಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಗು ಮಾರಾಟ ಮಾಡಿ ಪತ್ನಿ ಕಾಣೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್; ಗಂಡನ ಅಸಲಿ ಕೃತ್ಯ ಬಯಲು&lt;/strong&gt;&lt;/p&gt;&lt;p&gt;ಎಎಸ್ಪಿ ಶಿವಾನಂದ ಕಟಗಿ, ವಿನೋದ ಮುಕ್ತೇದಾರ, ಪಿಐ ಎಸ್&zwnj;.ಎಸ್. ಕಮತಗಿ ಹಾಗೂ ಗ್ರಾಮೀಣ ಪೊಲೀಸರು ಐದು ದಿನಗಳಲ್ಲಿಯೇ ಈ ಕೊಲೆ ಪ್ರಕರಣವನ್ನು ಬೇಧಿಸಿದ್ದು, ಅವರಿಗೆ ನಗದು ಬಹುಮಾನ ಸಹ ನೀಡಲಾಗುವುದು ಎಂದ ಗುಂಜನ ಆರ್ಯ ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ: ಒಂದು ಮಗು ಗಂಭೀರ&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/mundagoda-based-buddhist-monk-tashi-dhondup-murder-case-update-three-accused-arrested-by-dharwad-police-mrq/articleshow-oowg67i"/>
        </item>
        <item>
            <title><![CDATA[ಅಬ್ಬಾ, ಧಾರವಾಡಲ್ಲಿ ಎಂಥಾ ಬಿಸಿಲು! ಗರ್ಭಿಣಿಯರು, ಮಕ್ಕಳು, ವಯೋವೃದ್ಧರು ಹೈರಾಣ, ಹೀಟ್‌ಸ್ಟ್ರೋಕ್‌ ವಾರ್ಡ್‌ ಸ್ಥಾಪನೆ!]]></title>
            <link>https://kannada.asianetnews.com/karnataka-districts/temperatures-rise-in-dharwad-heatstroke-ward-set-up-rav/articleshow-p9fy858</link>
            <guid isPermaLink="true">https://kannada.asianetnews.com/karnataka-districts/temperatures-rise-in-dharwad-heatstroke-ward-set-up-rav/articleshow-p9fy858</guid>
            <pubDate>Sun, 03 May 2026 11:13:45 +0530</pubDate>
            <description><![CDATA[ಧಾರವಾಡ ಜಿಲ್ಲೆಯಲ್ಲಿ ದಾಖಲೆಯ ಬಿಸಿಲು ಏರಿಕೆಯಾಗುತ್ತಿದ್ದು, ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿಯ ಕೆಎಂಸಿಆರ್&zwnj;ಐ ಮತ್ತು ಚಿಟಗುಪ್ಪಿ ಆಸ್ಪತ್ರೆಗಳಲ್ಲಿ ಹವಾನಿಯಂತ್ರಿತ 'ಹೀಟ್&zwnj; ಸ್ಟ್ರೋಕ್&zwnj; ವಾರ್ಡ್&zwnj;'ಗಳನ್ನು ತೆರೆಯಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqp5kn3pq67d2v34t62tkvr1,imgname-----------------------2026-05-03t110940.253-1777786803318.jpg" type="image/jpeg" height="390" width="690"/>
            <content:encoded><![CDATA[&lt;h2&gt;ಅಜೀಜಅಹ್ಮದ ಬಳಗಾನೂರ&lt;/h2&gt;&lt;p&gt;&lt;strong&gt;ಹುಬ್ಬಳ್ಳಿ (ಮೇ.3): &lt;/strong&gt;ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಬಿಸಿಲು ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕರ್ನಾಟಕದ ಸಂಜೀವಿನಿ ಖ್ಯಾತಿಯ ಕೆಎಂಸಿಆರ್&zwnj;ಐನಲ್ಲಿ 14 ಹಾಗೂ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ 6 ಬೆಡ್&zwnj;ಗಳುಳ್ಳ ಸುಸಜ್ಜಿತ ಹವಾನಿಯಂತ್ರಿತ &quot;ಹೀಟ್&zwnj; ಸ್ಟ್ರೋಕ್&zwnj; ವಾರ್ಡ್&zwnj;&quot; ತೆರೆಯಲಾಗಿದೆ.&lt;/p&gt;&lt;p&gt;ಸೆಕೆಯೊಂದಿಗೆ ಬೀಸುತ್ತಿರುವ ಬಿಸಿ ಗಾಳಿಯು ವಯೋವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಹೈರಾಣಾಗುವಂತೆ ಮಾಡಿದೆ. ಬಿಸಿಲಿನಿಂದಾಗಿ ಮಕ್ಕಳಲ್ಲಿ ತೀವ್ರ ವಾಂತಿ-ಭೇದಿ, ಮೂರ್ಚೆರೋಗ, ನಿಶಕ್ತಿಯಾಗುವುದು, ಚರ್ಮರೋಗ ಸಮಸ್ಯೆ, ಹೃದಯ ಹಾಗೂ ಕಿಡ್ನಿ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿವೆ. ಬಿರುಬಿಸಿಲಿನ ಮಧ್ಯೆಯೇ ಆಗಾಗ ಸುರಿಯುತ್ತಿರುವ ಅಕಾಲಿಕ ಮಳೆಯೂ ರೋಗ ಉಲ್ಬಣಕ್ಕೆ ಕಾರಣವಾಗುತ್ತಿದೆ.&lt;/p&gt;&lt;p&gt;ಬಿಸಿಲಿನ ಬೇಗೆಯಿಂದ ಬಳಲಿ ಕೆಎಂಸಿಆರ್&zwnj;ಐ ಒಪಿಡಿಗೆ ನಿತ್ಯವೂ ನೂರಾರು ಜನರು ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದರಲ್ಲಿ ವಾಂತಿ-ಭೇದಿ, ನಿಶಕ್ತಿ, ನಿರ್ಜಲೀಕರಣ, ಆಮಶಂಕೆ ಹಾಗೂ ಚರ್ಮ ರೋಗದವರದ್ದೇ ಹೆಚ್ಚಿನ ಪಾಲಿದೆ ಎನ್ನುತ್ತಾರೆ ವೈದ್ಯರು.&lt;/p&gt;&lt;h2&gt;ದಾಖಲೆಯ ಬಿಸಿಲು:&lt;/h2&gt;&lt;p&gt;ಹಲವು ವರ್ಷಗಳಿಂದ ಜಿಲ್ಲೆಯ ತಾಪಮಾನ ಗಮನಿಸಿದಾಗ 33ರಿಂದ 36 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿತ್ತು. ಆದರೆ, ಕಳೆದ 2-3 ವರ್ಷಗಳಿಂದ 36ರಿಂದ 39 ಡಿಗ್ರಿ ಸೆಲ್ಸಿಯಸ್&zwnj; ದಾಖಲಾಗಿದೆ. ಈ ಬಾರಿ ಏ. 15ರಂದು ಹುಬ್ಬಳ್ಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್&zwnj; ತಾಪಮಾನ ದಾಖಲಾಗಿದೆ. ಈ ರೀತಿಯ ಸುಡು ಬಿಸಿಲಿನಲ್ಲಿಯೇ ಓಡಾಡುತ್ತಿರುವವರಿಗೆ ಹೆಚ್ಚಾಗಿ ತಲೆ ನೋವು, ತೀವ್ರತರದ ಆಯಾಸ, ಸುಸ್ತು, ನಿಶಕ್ತಿ, ಚರ್ಮ ತುರಿಕೆ, ಪದೇ ಪದೇ ಜ್ವರ ಕಾಣಿಸಿಕೊಳ್ಳುವುದು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ.&lt;/p&gt;&lt;h3&gt;ನಗರದಲ್ಲಿ 20 ಬೆಡ್&zwnj; ಸ್ಥಾಪನೆ:&lt;/h3&gt;&lt;p&gt;ಇಲ್ಲಿನ ಕೆಎಂಸಿಆರ್&zwnj;ಐನಲ್ಲಿ 14 ಹಾಗೂ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯ 6 ಬೆಡ್&zwnj;ಗಳುಳ್ಳ ಹೀಟ್&zwnj;ಸ್ಟ್ರೋಕ್&zwnj; ವಾರ್ಡ್&zwnj; ಸ್ಥಾಪಿಸಲಾಗಿದೆ. ಈ ವಾರ್ಡ್&zwnj;ಗಳು ಸಂಪೂರ್ಣ ಹವಾನಿಯಂತ್ರಿತವಾಗಿದ್ದು, ಐಸ್ ಕ್ಯೂಬ್, ಒಆರ್&zwnj;ಎಸ್, ಥರ್ಮಾಮೀಟರ್ ಸೇರಿದಂತೆ ಎಲ್ಲ ತುರ್ತು ಔಷಧಿ ಸಂಗ್ರಹಿಸಿ ಇಡಲಾಗಿದೆ. ಇಲ್ಲಿ ಇಬ್ಬರು ನುರಿತ ವೈದ್ಯರು ಹಾಗೂ 4 ಸಿಬ್ಬಂದಿಯನ್ನು ರೋಗಿಗಳ ಕಾಳಜಿಗಾಗಿಯೇ ನಿಯೋಜಿಸಲಾಗಿದೆ. ಕೆಎಂಸಿಆರ್&zwnj;ಐನಲ್ಲಿ 10-12 ದಿನಗಳ ಹಿಂದೆ ಹಾಗೂ ಚಿಟಗುಪ್ಪಿಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಈ ವಿಶೇಷ ವಾರ್ಡ್&zwnj; ತೆರೆಯಲಾಗಿದೆ.&lt;/p&gt;&lt;p&gt;ಉತ್ತರ ಕರ್ನಾಟಕದ ಹತ್ತಾರು ಜಿಲ್ಲೆಗಳಿಂದ ಚಿಕಿತ್ಸೆಗಾಗಿ ಕೆಎಂಸಿಆರ್&zwnj;ಐಗೆ ಬರುತ್ತಾರೆ. ಬಿಸಿಲಿನ ಪ್ರಖರತೆಯಿಂದಾಗಿ ಜನರಲ್ಲಿ ಹಲವು ರೀತಿಯ ಆರೋಗ್ಯ ಸಮಸ್ಯೆ ಕಂಡು ಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ 14 ಬೆಡ್&zwnj;ಗಳುಳ್ಳ ಹೀಟ್ ಸ್ಟ್ರೋಕ್&zwnj; ವಾರ್ಡ್ ತೆರೆಯಲಾಗಿದೆ. ಈವರೆಗೂ ಯಾವುದೇ ಗಂಭೀರ ಪ್ರಕರಣಗಳು ದಾಖಲಾಗಿಲ್ಲ.&lt;/p&gt;&lt;h3&gt;ಡಾ. ಈಶ್ವರ ಹಸಬಿ, ಕೆಎಂಸಿಆರ್&zwnj;ಐನ ಅಧೀಕ್ಷಕರು&lt;/h3&gt;&lt;p&gt;ಈ ವರ್ಷ ಬಿಸಿಲಿನ ಪ್ರಖರತೆ ಹೆಚ್ಚಳವಾಗಿದ್ದು ಆದಷ್ಟು ಇಳಿ ಹೊತ್ತಿನಲ್ಲೇ ಹೊರಗೆ ಬರುವುದು ಸೂಕ್ತ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಎಚ್ಚರ ವಹಿಸಬೇಕು. ಶುದ್ಧನೀರು, ಮಜ್ಜಿಗೆ, ಎಳನೀರು ಸೇರಿದಂತೆ ತಂಪು ಪಾನೀಯ ಹೆಚ್ಚು ಸೇವಿಸಬೇಕು. ಚಿಟಗುಪ್ಪಿ ಆಸ್ಪತ್ರೆಯಲ್ಲಿ 6 ಬೆಡ್&zwnj;ಗಳುಳ್ಳ ವಾರ್ಡ್&zwnj; ಮಾಡಲಾಗಿದೆ.&lt;/p&gt;&lt;h3&gt;ಡಾ. ಶ್ರೀಧರ ದಂಡಪ್ಪನವರ, ಮುಖ್ಯ ವೈದ್ಯಾಧಿಕಾರಿ, ಚಿಟಗುಪ್ಪಿ ಆಸ್ಪತ್ರೆ&lt;/h3&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/temperatures-rise-in-dharwad-heatstroke-ward-set-up-rav/articleshow-p9fy858"/>
        </item>
        <item>
            <title><![CDATA[ರಾಜ್ಯದಲ್ಲಿ ವರುಣನ ಅಬ್ಬರ: ಧಾರವಾಡ, ಬೆಳಗಾವಿ, ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ! ಎಲ್ಲೆಲ್ಲಿ ಎಷ್ಟು? ವಿವರ ನೋಡಿ]]></title>
            <link>https://kannada.asianetnews.com/gallery/state/karnataka-rain-update-dharwad-belagavi-chikkamagaluru-heavy-rainfall-damage-orange-alert-sat-prkl4g1</link>
            <guid isPermaLink="true">https://kannada.asianetnews.com/gallery/state/karnataka-rain-update-dharwad-belagavi-chikkamagaluru-heavy-rainfall-damage-orange-alert-sat-prkl4g1</guid>
            <pubDate>Tue, 12 May 2026 22:29:11 +0530</pubDate>
            <description><![CDATA[&lt;p&gt;ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಧಾರವಾಡ, ಬೆಳಗಾವಿ, ಮತ್ತು ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲಿ ಎಷ್ಟು ಮಳೆಯಾಗಿದೆ ವಿರ ನೋಡಿ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krehex85a05kq26aw93yw8fb,imgname-screenshot-2026-05-12-211856-1778604537093.png" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಧಾರವಾಡ, ಬೆಳಗಾವಿ, ಮತ್ತು ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲಿ ಎಷ್ಟು ಮಳೆಯಾಗಿದೆ ವಿರ ನೋಡಿ..&lt;/p&gt;&lt;img&gt;&lt;p&gt;ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದೆ. ಮಂಗಳವಾರ ಸಂಜೆ ಧಾರವಾಡ, ಬೆಳಗಾವಿ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಯಾವ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ.&lt;/p&gt;&lt;img&gt;&lt;p&gt;ಧಾರವಾಡ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ನೆಮ್ಮದಿ ಸಿಕ್ಕಂತಾಗಿದೆ. ಆದರೆ, ಬಿರುಗಾಳಿಯ ರಭಸಕ್ಕೆ ನಗರದ ಹಲವೆಡೆ ಮರಗಳು ಉರುಳಿ ಬಿದ್ದಿವೆ.&amp;nbsp;&lt;/p&gt;&lt;p&gt;ಮುಖ್ಯವಾಗಿ ಉಪ್ಪಿನ ಬೆಟಗೇರಿ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮರವನ್ನು ತೆರವುಗೊಳಿಸಿದರು. ಹವಾಮಾನ ಇಲಾಖೆಯ ವರದಿಯ ಪ್ರಕಾರ ಧಾರವಾಡದಲ್ಲಿ 15 ಮಿ.ಮೀ ಮಳೆಯಾಗಿದೆ.&lt;/p&gt;&lt;img&gt;&lt;p&gt;ಬೆಳಗಾವಿ ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿತ್ತು. ಚಿಕ್ಕೋಡಿ ಪಟ್ಟಣದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದವು. ವಾಹನ ಸವಾರರು ಮಳೆ ನೀರಿನಲ್ಲೇ ಸಂಚರಿಸಲು ಹರಸಾಹಸ ಪಟ್ಟರು.&lt;/p&gt;&lt;img&gt;&lt;p&gt;ಇನ್ನು ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಭಯಾನಕ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರುಗಾಳಿಯ ರಭಸಕ್ಕೆ ಗಿಡಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕಚ್ಚಿವೆ. ಈ ಭಯಾನಕ ದೃಶ್ಯಗಳು ಸ್ಥಳೀಯರ ಮೊಬೈಲ್&zwnj;ನಲ್ಲಿ ಸೆರೆಯಾಗಿವೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ಪಟ್ಟಣದಲ್ಲಿ ತಡರಾತ್ರಿವರೆಗೆ ವಿದ್ಯುತ್ ಕಡಿತಗೊಳಿಸಲಾಗಿತ್ತು.&lt;/p&gt;&lt;img&gt;&lt;p&gt;ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮತ್ತು ಆಲ್ದೂರು ಸುತ್ತಮುತ್ತ ಭಾರಿ ಗಾಳಿ-ಸಿಡಿಲಿನ ಜೊತೆ ಮಳೆ ಸುರಿದಿದೆ. ನಿನ್ನೆಯಷ್ಟೇ ಜಿಲ್ಲೆಯ ಹಲವೆಡೆ ಮಳೆಯಿಂದ ಅನಾಹುತಗಳು ಸಂಭವಿಸಿದ್ದವು, ಇಂದು ಕೂಡ ಅದೇ ಆರ್ಭಟ ಮುಂದುವರಿದಿದೆ. ಬಿರುಗಾಳಿಯ ಜೊತೆ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ.&lt;/p&gt;&lt;img&gt;&lt;p&gt;ಬೆಂಗಳೂರು ಹವಾಮಾನ ಕೇಂದ್ರದ ವರದಿಯ ಪ್ರಕಾರ ರಾಜ್ಯದ ವಿವಿಧೆಡೆ ದಾಖಲಾದ ಮಳೆಯ ವಿವರ ಇಲ್ಲಿದೆ (ಮೇ 12, ರಾತ್ರಿ 9:30ರವರೆಗೆ):&lt;/p&gt;&lt;ul&gt; &lt;li&gt;ಧಾರವಾಡ: 15.0 ಮಿ.ಮೀ&lt;/li&gt; &lt;li&gt;ಸಿರ್ಸಿ (ಉತ್ತರ ಕನ್ನಡ): 11.5 ಮಿ.ಮೀ&lt;/li&gt; &lt;li&gt;ಆಗುಂಬೆ (ಶಿವಮೊಗ್ಗ): 8.0 ಮಿ.ಮೀ&lt;/li&gt; &lt;li&gt;ಗದಗ: 3.2 ಮಿ.ಮೀ&lt;/li&gt; &lt;li&gt;ಮುದಿಗೆರೆ (ಚಿಕ್ಕಮಗಳೂರು): 4.0 ಮಿ.ಮೀ&lt;/li&gt; &lt;li&gt;ಮಂಗಳೂರು: 1.0 ಮಿ.ಮೀ&lt;/li&gt;&lt;/ul&gt;&lt;img&gt;&lt;p&gt;ಬೆಳಗಾವಿ, ಚಿತ್ರದುರ್ಗ ಮತ್ತು ಕಲಬುರಗಿಯಲ್ಲಿ ಸಂಜೆ ವೇಳೆ ಗುಡುಗು ಸಹಿತ ಮೋಡಗಳು (CB clouds) ಕಂಡುಬಂದಿದ್ದು, ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆಯಾಗಿ ವರುಣನ ಆಗಮನ ಬಿಸಿಲಿನಿಂದ ಮುಕ್ತಿ ನೀಡಿದ್ದರೂ, ಅನಿರೀಕ್ಷಿತ ಬಿರುಗಾಳಿ ಜನರಲ್ಲಿ ಆತಂಕ ಮೂಡಿಸಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ರಾಜ್ಯದಲ್ಲಿ 8 ಜಿಲ್ಲೆಗೆ ಆರೆಂಟ್ ಅಲರ್ಟ್; ಮುಂದಿನ 5 ದಿನ ಈ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆ ಮುನ್ಸೂಚನೆ!&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-rain-update-dharwad-belagavi-chikkamagaluru-heavy-rainfall-damage-orange-alert-sat-prkl4g1"/>
        </item>
        <item>
            <title><![CDATA[ಹುಬ್ಬಳ್ಳಿ ಮೇಲ್ಸೇತುವೆ ಸಂಚಾರಕ್ಕೆ ಯಾವಾಗ ಮುಕ್ತ; ಇಲ್ಲಿದೆ ಕಾಮಗಾರಿಯ ಲೇಟೆಸ್ಟ್ ಮಾಹಿತಿ]]></title>
            <link>https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv</link>
            <guid isPermaLink="true">https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv</guid>
            <pubDate>Sat, 09 May 2026 08:24:13 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr5a56xpcg7vtg8xm6n55v8b,imgname-hubballi-fly-over--6--1778294889398.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿಯ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿಯು ಶೇ.70ರಷ್ಟು ಪೂರ್ಣಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಶಾಸಕ ಮಹೇಶ ಟೆಂಗಿನಕಾಯಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.&amp;nbsp;&lt;/p&gt;&lt;img&gt;&lt;p&gt;ಹುಬ್ಬಳ್ಳಿ: ನಗರದ ನಡೆಯುತ್ತಿರುವ ಮೇಲ್ಸೇತುವೆಯ ಕಾಮಗಾರಿ ಶೇ.70ರಷ್ಟು ಪೂರ್ಣಗೊಂಡಿದ್ದು ಡಿಸೆಂಬರ್&zwnj;ಗೆ ಮುಗಿಯಲಿದೆ. ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು. ಶುಕ್ರವಾರ ಕೋರ್ಟ್ ವೃತ್ತದಿಂದ ಹೊಸೂರ ವೃತ್ತದ ವರೆಗೂ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.&lt;/p&gt;&lt;img&gt;&lt;p&gt;ಪಂಚ ರಾಜ್ಯ ಚುನಾವಣೆ ಹಿನ್ನೆಲೆ ಕಾರ್ಮಿಕರು ಅಲ್ಲಿಗೆ ತೆರಳಿದ್ದರಿಂದ ಕಾಮಗಾರಿ ವಿಳಂಬವಾಗಿತ್ತು. ಇದೀಗ ಎಲ್ಲ ಕಾರ್ಮಿಕರು ಆಗಮಿಸಿದ್ದು ಕಾಮಗಾರಿ ಭರದಿಂದ ಸಾಗಿದೆ ಎಂದ ಅವರು, ಬಹುತೇಕ ಕೆಲಸ ಪೂರ್ಣಗೊಂಡಿದ್ದು ಗಲ್ಡರ್&zwnj; ಅಳವಡಿಸಲಾಗಿದೆ. ಕಾಮಗಾರಿ ಮುಗಿದ ಜಾಗದಲ್ಲಿ ₹ 13 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಕೇಂದ್ರದ ಅನುಮೋದನೆ ದೊರೆಕಿದೆ ಎಂದರು.&lt;/p&gt;&lt;img&gt;&lt;p&gt;ಮೊದಲ ಹಂತದಲ್ಲಿ ಹೊಸೂರ ವೃತ್ತದಿಂದ ಹಳೇ ಬಸ್ ನಿಲ್ದಾಣದ ವರೆಗೆ ಸಿಸಿ ರಸ್ತೆ ಕಾಮಗಾರಿ ಆರಂಭವಾಗಿದ್ದು, 15 ದಿನದಲ್ಲಿ ಮುಗಿಯಲಿದೆ. ಎರಡನೇ ಹಂತದಲ್ಲಿ ಚೆನ್ನಮ್ಮ ವೃತ್ತದಿಂದ ಭವಾನಿ ಆರ್ಕೆಡ್ ವರೆಗೆ ಕೈಗೊಳ್ಳಲು ಸೂಚಿಸಲಾಗಿದೆ. ದೇಸಾಯಿ ವೃತ್ತದಿಂದ ಕೋರ್ಟ್ ವೃತ್ತದ ವರೆಗಿನ ರಸ್ತೆ ಕಾಮಗಾರಿ ಆರಂಭಿಸಲಾಗಿದೆ. ಗದಗ ರಸ್ತೆಯಲ್ಲಿ ಕೆಲವು ಸಮಸ್ಯೆಗಳಿದ್ದು, ಪರಿಹರಿಸಿ ಕಾಮಗಾರಿ ಆರಂಭಿಸಲಿದ್ದಾರೆ ಎಂದು ಮಾಹಿತಿ ನೀಡಿದರು.&lt;/p&gt;&lt;img&gt;&lt;p&gt;ಬಿಆರ್&zwnj;ಟಿಎಸ್ ಬಸ್ ನಿಲ್ದಾಣದಲ್ಲಿ ಕೆಲವು ಸಮಸ್ಯೆಗಳಿದ್ದು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಬಸ್ ನಿಲ್ದಾಣ ಎದುರಿರುವ ಬಿಆರ್&zwnj;ಟಿಎಸ್ ಬಸ್ ನಿಲ್ದಾಣ ತೆರವುಗೊಳಿಸಿದ್ದು, ಅದನ್ನು ಗಾಳಿ ದುರ್ಗಮ್ಮ ದೇವಸ್ಥಾನ ಹತ್ತಿರ ವಾಹನ ಸವಾರರಿಗೆ ತೊಂದರೆಯಾಗದಂತೆ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.&lt;/p&gt;&lt;img&gt;&lt;p&gt;ಸದ್ಯಕ್ಕೆ ಪಾಲಿಕೆ ಎದುರಿಗಿರುವ ಬಸ್ ನಿಲ್ದಾಣ ತೆರವುಗೊಳಿಸಲು ನಿರ್ಧರಿಸಿದ್ದು ಕಾಮಗಾರಿ ಮುಗಿದ ಮೇಲೆ ಎಲ್ಲಿಗೆ ಸ್ಥಳಾಂತರಿಸಬೇಕು ಎಂಬುದನ್ನು ಚರ್ಚಿಸಲಾಗಿದೆ ಎಂದು ಹೇಳಿದರು. ಈ ವೇಳೆ ಉಪಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮೂರಿ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಡಿಸಿಪಿ ರವೀಶ್ ಸಿ.ಆರ್., ಎಸಿಪಿ ವೀರೇಶ ಪಾಟೀಲ, ಬಿಜೆಪಿ ಮುಖಂಡ ರವಿ ನಾಯಕ, ಈಶ್ವರಗೌಡ ಪಾಟೀಲ, ಸಾಯಿನಾಥ ದಲಬಂಜನ ಸೇರಿದಂತೆ ಅನೇಕರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸೂರ್ಯಕಾಂತಿ ರೈತರಿಗೆ ಸಿಹಿಸುದ್ದಿ ನೀಡಿದ ಸರ್ಕಾರ; ಫಿಕ್ಸ್ ಆಯ್ತು ಪ್ರತಿ ಕ್ವಿಂಟಾಲ್&zwnj; ದರ&lt;/strong&gt;&lt;/p&gt;&lt;img&gt;&lt;p&gt;ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದ ಒಟ್ಟು 87 ಫೌಂಡೇಶನ್&zwnj;ನಲ್ಲಿ 84 ಫೌಂಡೇಶನ್&zwnj; ಸ್ಥಾಪಿಸಲಾಗಿದೆ. ಆರು ಪೀಯರ್ ಕ್ಯಾಪ್ (ಸೇತುವೆ ಕಂಬದ ಮೇಲ್ಭಾಗ ರಚನೆ) ಅಳಡಿಸಬೇಕಿದೆ. 294 ಗಲ್ಡರ್&zwnj;ನಲ್ಲಿ 262 ಅಳವಡಿಸಿದ್ದು 25 ಗಲ್ಡರ್&zwnj;ಗಳ ತಯಾರಿಸಬೇಕಿದೆ. 32 ಸ್ಲ್ಯಾಬ್ ಅಳವಡಿಸುವುದು ಬಾಕಿ ಇದ್ದು, ಗಲ್ಡರ್ ಅಳವಡಿಸಿದ ಬಳಿಕ ಸ್ಲ್ಯಾಬ್ ಹಾಕಲಾಗುವುದು. ಚೆನ್ನಮ್ಮ ವೃತ್ತದಲ್ಲಿ ಬಾಕ್ಸ್ ಗಲ್ಡರ್ ಹಾಕುವುದು ಸ್ವಲ್ಪ ವಿಳಂಬವಾಗಲಿದೆ. ಫ್ಲೈಓವರ್ ಕಾಮಗಾರಿ ಮುಗಿದ ಸ್ಥಳದಲ್ಲಿ ಒಂದುವರೆ ತಿಂಗಳೊಳಗೆ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಲೋಕೋಪಯೋಗಿ ಅಧಿಕಾರಿ ಸತೀಶ ನಾಗನೂರ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Umesh Meti Kodimath visit: ಕೋಡಿಮಠ ಶ್ರೀಗಳಗೆ ಬೆಳ್ಳಿ ಕೀರಿಟ ಅರ್ಪಿಸಿದ ಶಾಸಕ ಉಮೇಶ್ ಮೇಟಿ&lt;/strong&gt;&lt;/p&gt;]]></content:encoded>
            <category>dharwad</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/when-will-the-hubballi-flyover-be-open-for-traffic-latest-information-on-the-work-here-mrq-tykmxbv"/>
        </item>
        <item>
            <title><![CDATA[ಧಾರವಾಡ ಹರ್ಷಾ ಎಂಟರ್ಪ್ರೈಸಸ್ ವಂಚನೆ: ಸಂತ್ರಸ್ತರಿಗೆ ಪರಿಹಾರ ನೀಡಲು ಅರ್ಜಿ ಆಹ್ವಾನಿಸಿದ ಜಿಲ್ಲಾಡಳಿತ!]]></title>
            <link>https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta</link>
            <guid isPermaLink="true">https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta</guid>
            <pubDate>Sun, 10 May 2026 17:41:46 +0530</pubDate>
            <description><![CDATA[&lt;p&gt;ಧಾರವಾಡ ಮನಿ ಡಬ್ಲಿಂಗ್ ಹೆಸರಲ್ಲಿ ಹರ್ಷಾ ಎಂಟರ್ಪ್ರೈಸಸ್ ಬಹುಕೋಟಿ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಸರ್ಕಾರ ಕಾಸ್ನಿಸ್ ಬ್ರದರ್ಸ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಕೆ ವಿವರ, ಕೊನೆ ದಿನಾಂಕ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr8vkdx93d4rrgapzqv5xyjv,imgname-dharwad-harsha-enterprises-scam-1778413844392.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡ ಮನಿ ಡಬ್ಲಿಂಗ್ ಹೆಸರಲ್ಲಿ ಹರ್ಷಾ ಎಂಟರ್ಪ್ರೈಸಸ್ ಬಹುಕೋಟಿ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಸರ್ಕಾರ ಕಾಸ್ನಿಸ್ ಬ್ರದರ್ಸ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಕೆ ವಿವರ, ಕೊನೆ ದಿನಾಂಕ ಇಲ್ಲಿದೆ.&lt;/p&gt;&lt;img&gt;&lt;p&gt;ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಹರ್ಷಾ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಾವಿರಾರು ಜನರಿಗೆ ಹಣದ ಆಮಿಷವೊಡ್ಡಿ ಪಂಗನಾಮ ಹಾಕಿದ್ದ ಕಾಸ್ನಿಸ್ ಬ್ರದರ್ಸ್ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದು, ವಂಚನೆಗೊಳಗಾದವರಿಗೆ ಪರಿಹಾರ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ.&lt;/p&gt;&lt;img&gt;&lt;p&gt;2016-17ರ ಅವಧಿಯಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಕಾಸ್ನಿಸ್ ಬ್ರದರ್ಸ್ ಈ ಬೃಹತ್ ವಂಚನೆ ಜಾಲವನ್ನು ನಡೆಸಿದ್ದರು. &lsquo;ಹಣವನ್ನು ದುಪ್ಪಟ್ಟು (Double) ಮಾಡಿಕೊಡುತ್ತೇವೆ&rsquo; ಎಂದು ಜನರಿಗೆ ಆಮಿಷವೊಡ್ಡಿದ್ದ ಹರ್ಷಾ ಎಂಟರ್ಪ್ರೈಸಸ್, ಜಿಲ್ಲೆಯಾದ್ಯಂತ ಸಾವಿರಾರು ಜನರಿಂದ ಹಣ ಸಂಗ್ರಹಿಸಿತ್ತು. ಜನರಿಂದ ಪಡೆದ ಕೋಟ್ಯಂತರ ರೂಪಾಯಿ ಹಣವನ್ನು ಸಿನಿಮಾ ನಿರ್ಮಾಣಕ್ಕೂ ಬಳಸಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ.&lt;/p&gt;&lt;img&gt;&lt;p&gt;ಕಂಪನಿಯು ಹಣ ಹಿಂತಿರುಗಿಸದೆ ವಂಚಿಸಿದಾಗ ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರ ತನಿಖೆಯನ್ನು ಸಿಐಡಿಗೆ (CID) ವಹಿಸಿತ್ತು.&lt;/p&gt;&lt;img&gt;&lt;p&gt;ಸಿಐಡಿ ಅಧಿಕಾರಿಗಳು ನಡೆಸಿದ ಸುದೀರ್ಘ ತನಿಖೆಯಲ್ಲಿ ಹರ್ಷಾ ಎಂಟರ್ಪ್ರೈಸಸ್ ಸುಮಾರು 77 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿರುವ ದಾಖಲೆಗಳು ಲಭ್ಯವಾಗಿವೆ. ನೂರಾರು ಜನಸಾಮಾನ್ಯರು ತಮ್ಮ ಜೀವಮಾನದ ಉಳಿತಾಯವನ್ನು ಈ ಕಂಪನಿಯಲ್ಲಿ ಹೂಡಿಕೆ ಮಾಡಿ ಕಳೆದುಕೊಂಡಿದ್ದರು. ಸದ್ಯ ಸಿಐಡಿ ವರದಿಯನ್ನಾಧರಿಸಿ ಸರ್ಕಾರವು ಕಾಸ್ನಿಸ್ ಬ್ರದರ್ಸ್ ಅವರ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿದೆ.&lt;/p&gt;&lt;img&gt;&lt;p&gt;ಕಾಸ್ನಿಸ್ ಬ್ರದರ್ಸ್&zwnj;ನಿಂದ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸಲು ಧಾರವಾಡ ಜಿಲ್ಲಾಡಳಿತ ಮುಂದಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಮೂಲಕ ಸಂತ್ರಸ್ತರಿಗೆ ಹಣ ಮರಳಿಸಲು ಅರ್ಜಿ ಆಹ್ವಾನಿಸಲಾಗಿದೆ.&lt;/p&gt;&lt;p&gt;&lt;strong&gt;ದಾಖಲಾತಿ ಸಲ್ಲಿಕೆ: &lt;/strong&gt;ವಂಚಿತರು ತಮ್ಮಲ್ಲಿರುವ ಹೂಡಿಕೆಯ ಮೂಲ ದಾಖಲೆಗಳು, ರಶೀದಿಗಳು ಮತ್ತು ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.&lt;/p&gt;&lt;img&gt;&lt;p&gt;&lt;strong&gt;ಅವಕಾಶ: &lt;/strong&gt;ಅರ್ಜಿ ಸಲ್ಲಿಸಲು ಜಿಲ್ಲಾಡಳಿತವು ಒಂದು ತಿಂಗಳ ಕಾಲಾವಕಾಶ (ಏ.27ರಿಂದ ಮೇ 26ರವರೆಗೆ) ನೀಡಿದೆ.&lt;/p&gt;&lt;p&gt;&lt;strong&gt;ಜನರ ಸಾಲು:&lt;/strong&gt; ಪರಿಹಾರದ ನಿರೀಕ್ಷೆಯಲ್ಲಿ ನೂರಾರು ಜನರು ಈಗಾಗಲೇ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾಡಳಿತದ ಕಚೇರಿ ಮುಂದೆ ಸಾಲುಗಟ್ಟಿ ನಿಂತು ಅರ್ಜಿ ಸಲ್ಲಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಅರ್ಹ ಸಂತ್ರಸ್ತರಿಗೆ ಹಂತ ಹಂತವಾಗಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಹತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ವಂಚಿತರಿಗೆ ಈಗ ನ್ಯಾಯ ಸಿಗುವ ಭರವಸೆ ಮೂಡಿದೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta"/>
        </item>
        <item>
            <title><![CDATA[ಉತ್ತರ ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಹುಬ್ಬಳ್ಳಿ, ವಿಜಯಪುರ ಜನರಿಗೆ ಈ ರೈಲಿನ ಟಿಕೆಟ್ ದರ ಇಳಿಕೆ!]]></title>
            <link>https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</link>
            <guid isPermaLink="true">https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036</guid>
            <pubDate>Mon, 11 May 2026 19:53:18 +0530</pubDate>
            <description><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krbp7dt0zx3643fjbw2gffha,imgname-hubballi-to-rishikesh-train-1778508871487.jpg" type="image/jpeg" height="390" width="690"/>
            <content:encoded><![CDATA[&lt;p&gt;ಉತ್ತರ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಹುಬ್ಬಳ್ಳಿ-ವಿಜಯಪುರ ಮೆಮು ಮತ್ತು ಹುಬ್ಬಳ್ಳಿ-ಹೃಷಿಕೇಶ ಸೇರಿದಂತೆ ಹಲವು ವಿಶೇಷ ರೈಲುಗಳನ್ನು ನಿಯಮಿತ ಸೇವೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಬದಲಾವಣೆಯಿಂದ ಟಿಕೆಟ್ ದರದಲ್ಲಿ ಶೇ. 30% ರಷ್ಟು ಕಡಿತವಾಗಲಿದೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ/ಧಾರವಾಡ: ಉತ್ತರ ಕರ್ನಾಟಕದ ಜಿಲ್ಲೆಗಳ ರೈಲ್ವೆ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ನೈಋತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಈವರೆಗೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಪ್ರಮುಖ ರೈಲುಗಳನ್ನು ಇಂದಿನಿಂದ 'ನಿಯಮಿತ ಸೇವೆ'ಗಳನ್ನಾಗಿ (Regular Train Services) ಪರಿವರ್ತಿಸಲಾಗುತ್ತಿದೆ. ಈ ಮಹತ್ವದ ನಿರ್ಧಾರವು ಉತ್ತರ ಕರ್ನಾಟಕದ ಜಿಲ್ಲೆಗಳ ಸಂಪರ್ಕ ಕ್ರಾಂತಿಗೆ ಹೊಸ ವೇಗ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಹುಬ್ಬಳ್ಳಿ ಮತ್ತು ವಿಜಯಪುರ ನಡುವೆ ಸಂಚರಿಸುವ ರೈಲು ಸಂಖ್ಯೆ 56919/20 ಹಾಗೂ 66501/02 ರೈಲುಗಳು ಇನ್ನು ಮುಂದೆ ನಿಯಮಿತವಾಗಿ ಸಂಚರಿಸಲಿವೆ. ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹುಬ್ಬಳ್ಳಿ - ವಿಜಯಪುರ ನೂತನ ನಿಯಮಿತ ಮೆಮು (MEMU- Mainline Electric Multiple Unit) ರೈಲಿಗೆ (ರೈಲು ಸಂಖ್ಯೆ: 66501) ಹಸಿರು ನಿಶಾನೆ ತೋರುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.&amp;nbsp;&lt;/p&gt;&lt;p&gt;ಇದರಿಂದ ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ನಿತ್ಯ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮೆಮು ರೈಲು ಸಂಚಾರದಿಂದ ವೇಗದ ಮತ್ತು ಪರಿಸರ ಸ್ನೇಹಿ ಪ್ರಯಾಣ ಸಾಧ್ಯವಾಗಲಿದೆ.&lt;/p&gt;&lt;img&gt;&lt;p&gt;ಉತ್ತರ ಭಾರತಕ್ಕೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ರೈಲು ಸಂಖ್ಯೆ 17363/64 ಹುಬ್ಬಳ್ಳಿ - ಯೋಗ ನಗರಿ ಹೃಷಿಕೇಶ ವಾರಕ್ಕೊಮ್ಮೆ ಸಂಚರಿಸುವ ರೈಲನ್ನು ಈಗ ನಿಯಮಿತ ಸೇವೆಯನ್ನಾಗಿ ಮಾಡಲಾಗಿದೆ. ಇದರಿಂದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವವರಿಗೆ ವರ್ಷಪೂರ್ತಿ ಸುಲಭ ಪ್ರಯಾಣ ಒದಗಿಸಿದಂತಾಗುತ್ತದೆ.&lt;/p&gt;&lt;img&gt;&lt;p&gt;ಈ ರೈಲುಗಳ ಸೇವೆಯು ನಿಯಮಿತವಾಗಿ ಬದಲಾದ ಕಾರಣ ಪ್ರಯಾಣಿಕರಿಗೆ ಆರ್ಥಿಕವಾಗಿ ದೊಡ್ಡ ಲಾಭ ಸಿಗಲಿದೆ.&lt;/p&gt;&lt;p&gt;ಸಾಮಾನ್ಯ ದರ್ಜೆಯ ಪ್ರಯಾಣಿಕರಿಗೆ ಇನ್ನು ಮುಂದೆ ಸೂಪರ್&zwnj;ಫಾಸ್ಟ್ ಹೆಚ್ಚುವರಿ ಶುಲ್ಕವಿರುವುದಿಲ್ಲ.&lt;/p&gt;&lt;p&gt;ಮೀಸಲು ದರ್ಜೆಯ (Reserved Class) ಟಿಕೆಟ್ ದರದಲ್ಲಿ ಸುಮಾರು 30% ರಷ್ಟು ಕಡಿತವಾಗಲಿದ್ದು, ಪ್ರಯಾಣವು ಅತ್ಯಂತ ಕೈಗೆಟಕುವ ದರದಲ್ಲಿ ಜನಸಾಮಾನ್ಯರಿಗೆ ಸಿಗಲಿದೆ.&lt;/p&gt;&lt;img&gt;&lt;p&gt;ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆಯು ದೇಶದ ಅಭಿವೃದ್ಧಿಗೆ ವೇಗ ತುಂಬುತ್ತಿದೆ. ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಸಚಿವರು ಶ್ಲಾಘಿಸಿದರು.&amp;nbsp;&lt;/p&gt;&lt;p&gt;ಈ ಕಾರ್ಯಕ್ರಮದ ವೇಳೆ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದ (SWR) ಜನರಲ್ ಮ್ಯಾನೇಜರ್ ಪಿ. ಅನಂತು ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬದಲಾವಣೆಯು ಉತ್ತರ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ವಲಯಕ್ಕೆ ಹೊಸ ಶಕ್ತಿ ತುಂಬಲಿದೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-good-news-for-north-karnataka-hubballi-vijayapura-trains-become-regular-connectivity-to-rishikes-sat-ybhs036"/>
        </item>
        <item>
            <title><![CDATA[ಬೆಂಗಳೂರು-ವಿಜಯಪುರ ನಡುವೆ ಬೈಪಾಸ್ ರೈಲು ಸಂಚಾರ ಆರಂಭ: 5 ಗಂಟೆ ಸಮಯ ಉಳಿತಾಯಕ್ಕೆ ಸಚಿವ ಎಂ.ಬಿ. ಪಾಟೀಲ ಸಂತಸ!]]></title>
            <link>https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</link>
            <guid isPermaLink="true">https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</guid>
            <pubDate>Fri, 15 May 2026 19:41:15 +0530</pubDate>
            <description><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7vqdjdvnc1cy078ydnn1kj,imgname-idnian-railways--3--1778380420685.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.&lt;img&gt;&lt;p&gt;ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು-ವಿಜಯಪುರ ನಡುವಿನ ತ್ವರಿತ ರೈಲು ಸೇವೆಗೆ ಈಗ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ವಿಶೇಷ ರೈಲು ಓಡಿಸುವ ಸಚಿವ ಎಂ.ಬಿ. ಪಾಟೀಲರ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬೆಳವಣಿಗೆಯ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ತಮ್ಮ ಮನವಿಗೆ ಸ್ಪಂದಿಸಿ ವಿಶೇಷ ರೈಲು ಆರಂಭಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಎಂ.ಬಿ. ಪಾಟೀಲರು ವಿಜಯಪುರ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಅವರು ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆದು, ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸುವುದರಿಂದ ಸಮಯ ಉಳಿತಾಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದರು.&lt;/p&gt;&lt;img&gt;&lt;p&gt;ಸದ್ಯ ವಿಜಯಪುರ ಮತ್ತು ಬೆಂಗಳೂರು ನಡುವೆ ರೈಲು ಪ್ರಯಾಣಕ್ಕೆ ಸುಮಾರು 15 ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ. ಆದರೆ, ರೈಲುಗಳು ಹುಬ್ಬಳ್ಳಿ ನಗರದೊಳಗೆ ಹೋಗುವ ಬದಲು ಹುಬ್ಬಳ್ಳಿ ಬೈಪಾಸ್ ಮೂಲಕ ಸಂಚರಿಸಿದರೆ ಈ ಸಮಯವನ್ನು ಕೇವಲ 10 ಗಂಟೆಗಳಿಗೆ ಇಳಿಸಬಹುದು.&amp;nbsp;&lt;/p&gt;&lt;p&gt;ಇದರಿಂದ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ರಾಜಧಾನಿಗೆ ಬರಲು ಮತ್ತು ಹೋಗಲು ಲಭ್ಯವಿರುವ ಅತ್ಯಂತ ವೇಗದ ಸಾರಿಗೆ ಇದಾಗಲಿದೆ ಎಂದು ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ನೈರುತ್ಯ ರೈಲ್ವೆಯು ಈ ವಿಶೇಷ ರೈಲನ್ನು ಜೂನ್ 28ರವರೆಗೆ ಓಡಿಸಲು ನಿರ್ಧರಿಸಿದೆ.&lt;/p&gt;&lt;p&gt;&lt;strong&gt;ಯಶವಂತಪುರದಿಂದ: &lt;/strong&gt;ಪ್ರತೀ ಶನಿವಾರ ಬೆಂಗಳೂರಿನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ವಿಜಯಪುರದಿಂದ:&lt;/strong&gt; ಪ್ರತೀ ಭಾನುವಾರ ಹಿಂತಿರುಗಲಿದೆ.&lt;/p&gt;&lt;p&gt;&lt;strong&gt;ಬೋಗಿಗಳು:&lt;/strong&gt; ಒಟ್ಟು 19 ಬೋಗಿಗಳನ್ನು ಈ ರೈಲು ಹೊಂದಿರಲಿದೆ.&lt;/p&gt;&lt;p&gt;&lt;strong&gt;ನಿಲುಗಡೆಗಳು:&lt;/strong&gt; ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ, ಗದಗ ಬೈಪಾಸ್, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಮತ್ತು ಬಸವನ ಬಾಗೇವಾಡಿ ನಿಲ್ದಾಣಗಳಲ್ಲಿ ಈ ರೈಲು ನಿಲ್ಲಲಿದೆ.&lt;/p&gt;&lt;img&gt;&lt;p&gt;ಈ ವಿಶೇಷ ರೈಲನ್ನು ಕೇವಲ ಒಂದು ತಿಂಗಳಿಗೆ ಸೀಮಿತಗೊಳಿಸದೆ, ತ್ವರಿತವಾಗಿ ಕಾಯಂ ರೈಲನ್ನಾಗಿ ಪರಿವರ್ತಿಸಬೇಕು ಎಂದು ಸಚಿವರು ಮತ್ತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.&amp;nbsp;&lt;/p&gt;&lt;img&gt;&lt;p&gt;&lt;strong&gt;ಸೂಕ್ತ ಸಮಯ: &lt;/strong&gt;ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಬೆಳಿಗ್ಗೆ 6ಕ್ಕೆ ವಿಜಯಪುರ ತಲುಪುವಂತಿರಬೇಕು. ಅದೇ ರೀತಿ ವಿಜಯಪುರದಿಂದ ರಾತ್ರಿ 8ಕ್ಕೆ ಹೊರಟು ಬೆಳಿಗ್ಗೆ 6ಕ್ಕೆ ಬೆಂಗಳೂರಿಗೆ ತಲುಪುವಂತಿರಬೇಕು.&lt;/p&gt;&lt;p&gt;&lt;strong&gt;ಯಶವಂತಪುರ ತಲುಪುವ ಸಮಯ: &lt;/strong&gt;ಈಗಿನ ವಿಶೇಷ ರೈಲು ಮುಂಜಾನೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಇದು ಪ್ರಯಾಣಿಕರಿಗೆ ಮನೆಗಳಿಗೆ ಹೋಗಲು ಕಷ್ಟಕರವಾಗುವುದರಿಂದ, ಮುಂಜಾನೆ 5:30 ರಿಂದ 6 ಗಂಟೆಯ ಸುಮಾರಿಗೆ ತಲುಪುವಂತೆ ಮಾಡಬೇಕು ಎಂದು ಅವರು ಕೋರಿದ್ದಾರೆ.&lt;/p&gt;]]></content:encoded>
            <category>dharwad</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q"/>
        </item>
    </channel>
</rss>
