<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Tue, 07 Apr 2026 10:32:12 +0530</lastBuildDate>
        <atom:link href="https://kannada.asianetnews.com/rss/gadag" rel="self" type="application/rss+xml"/>
        <item>
            <title><![CDATA[ಬೆಂಬಲ ಬೆಲೆಯಡಿ 20 ಕ್ವಿಂಟಲ್ ಮೆಕ್ಕೆಜೋಳ ಖರೀದಿ: ಸಚಿವ ಎಚ್.ಕೆ. ಪಾಟೀಲ]]></title>
            <link>https://kannada.asianetnews.com/politics/maize-support-price-hk-patil-announcement-mulgund-gvd/articleshow-i40g5x2</link>
            <guid isPermaLink="true">https://kannada.asianetnews.com/politics/maize-support-price-hk-patil-announcement-mulgund-gvd/articleshow-i40g5x2</guid>
            <pubDate>Thu, 04 Dec 2025 19:00:31 +0530</pubDate>
            <description><![CDATA[&lt;p&gt;ರಾಜ್ಯ ಸರ್ಕಾರ ಕನಿಷ್ಠ 12ರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್&zwnj;ಗೆ ₹2400ರಂತೆ ಖರೀದಿಸಲಾಗುವುದು ಎಂದು ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k2bahth6a7x7gcxndwa4d97g,imgname-ngn-1754874309158.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮುಳಗುಂದ (ಡಿ.04): &lt;/strong&gt;ಈ ಮೊದಲು ಬೆಂಬಲ ಬೆಲೆಯಡಿ ಪ್ರತಿ ರೈತರಿಂದ 5 ಕ್ವಿಂಟಲ್&zwnj; ಮೆಕ್ಕೆಜೋಳ ಖರೀದಿ ಮಾಡಲು ಸರ್ಕಾರ ನಿರ್ಧರಿಸಿತ್ತು. ಈ ಆದೇಶವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಕನಿಷ್ಠ 12ರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್&zwnj;ಗೆ ₹2400ರಂತೆ ಖರೀದಿಸಲಾಗುವುದು ಎಂದು ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು. ಸಮೀಪದ ಕಣವಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸಕ್ತ ವರ್ಷ ರಾಜ್ಯದಲ್ಲಿ ಅಂದಾಜು 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬಿತ್ತನೆ ಮಾಡಿ ಬೆಳೆಯಲಾಗಿದೆ. ಖರೀದಿ ಪ್ರಕ್ರಿಯೆಯನ್ನು ಹೇಗೆ ಮಾಡಬೇಕು ಎಂಬುದು ಸರ್ಕಾರಕ್ಕೆ ಒಂದು ದೊಡ್ಡ ಸವಾಲಾಗಿತ್ತು.&lt;/p&gt;&lt;p&gt;ರೈತರಿಗೆ ಸರ್ಕಾರ ಹೇಗಾದರೂ ಮಾಡಿ ಸ್ಪಂದಿಸಬೇಕು ಎಂಬ ಉದ್ದೇಶದಿಂದ ಪ್ರತಿ ರೈತರಿಂದ ಕನಿಷ್ಠ 12 ಕ್ವಿಂಟಲ್ ಗರಿಷ್ಠ 20 ಕ್ವಿಂಟಲ್ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದರು. ತಾಲೂಕಿನ ಮಲಸಮುದ್ರ ಗ್ರಾಮದಲ್ಲಿ ಧಾರವಾಡ ಹಾಲು ಒಕ್ಕೂಟದ ಹಾಲು ಸಂಗ್ರಹಣ ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ನೋಂದಣಿ ಪ್ರಕ್ರಿಯೆ ಮಂಗಳವಾರ ಪ್ರಾರಂಭಿಸಲಾಗಿದೆ ಎಂದರು. ಕಣವಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಮೈದಾನ ಹಾಗೂ ಹೈಮಾಸ್ಕ್ ವಿದ್ಯುತ್&zwnj; ದೀಪ ಉದ್ಘಾಟಿಸಲಾಯಿತು. ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಅಂದಾಜು ₹16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಗ್ರಾಪಂ ಉಪಕಾರ್ಯಾಲಯವನ್ನು ಸಚಿವರು ಉದ್ಘಾಟಿಸಿದರು.&lt;/p&gt;&lt;h2&gt;&lt;strong&gt;ಮೂರು ಕೊಠಡಿಗಳ ಉದ್ಘಾಟನೆ&lt;/strong&gt;&lt;/h2&gt;&lt;p&gt;ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ₹41 ಲಕ್ಷ ವೆಚ್ಚದಲ್ಲಿ ಮೂರು ಕೊಠಡಿಗಳನ್ನು ಉದ್ಘಾಟಿಸಲಾಯಿತು. ಅಂದಾಜು ₹18 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಬೇಡ್ಕರ್ ಭವನ ಹಾಗೂ ಅಂದಾಜು ₹33 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಹಳ್ಳಿ ಗ್ರಾಮೀಣ ಸಂತೆ ಕಟ್ಟಡ, ರಂಗ ಮಂದಿರ ಹಾಗೂ ನಾಟಕ ಮನೆಯನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು. ವಿಧಾನಪರಿಷತ್&zwnj; ಸದಸ್ಯರಾದ ಎಸ್.ವಿ. ಸಂಕನೂರ ಅವರ ಅನುದಾನದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟಿಸಲಾಯಿತು.&lt;/p&gt;&lt;p&gt;ಈ ವೇಳೆ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಗ್ರಾಪಂ ಅಧ್ಯಕ್ಷೆ ಹಾಲವ್ವ ಕುರಿ, ಉಪಾಧ್ಯಕ್ಷೆ ರೇಣವ್ವ ತಳವಾರ, ತಾಪಂ ಮಾಜಿ ಅಧ್ಯಕ್ಷ ಶರಣ ಬಸನಗೌಡ ಪಾಟೀಲ, ಬಾಬುಸಾಬ ಕಿಲ್ಲೆದಾರ, ಬಸವರಾಜ ಬಂದಕ್ಕನವರ, ಪರಪ್ಪ ಕೋಳಿವಾಡ, ಯಲ್ಲಪ್ಪ ಕೋರಿ, ಪ್ರಕಾಶ ಕುರ್ತಕೋಟಿ, ಗಂಗಣ್ಣ ಗಡಾದ, ಕೃಷ್ಣ ನಾಗಲೋಟಿ, ಎಸ್.ವೈ. ಕೋರಿ, ಶರೀಫ ದೊಡ್ಮನಿ, ಅಕ್ಕಮಹಾದೇವಿ ಬಳಿಗಾರ, ಪಾರವ್ವ ಕುರ್ತುಕೋಟಿ, ಮಂಜುನಾಥ ಕೋರಿ, ಶಂಕ್ರಪ್ಪ ಕೋಳಿವಾಡ, ಪ್ರಭು ಹುಡೇದ, ಬಿ.ಟಿ. ಸೋಮರಡ್ಡಿ, ಶಿವಾನಂದ ಮಾದಣ್ಣವರ, ನಿಂಗಪ್ಪ ಛಲವಾದಿ ಮತ್ತಿತರರು ಇದ್ದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/maize-support-price-hk-patil-announcement-mulgund-gvd/articleshow-i40g5x2"/>
        </item>
        <item>
            <title><![CDATA[ಗಜೇಂದ್ರಗಢದಲ್ಲಿ ಕ್ವಿಂಟಾಲ್ ಶೇಂಗಾ 11 ಸಾವಿರಕ್ಕೂ ಅಧಿಕ ದರಕ್ಕೆ ಮಾರಾಟ: ರೈತರು ಖುಷ್]]></title>
            <link>https://kannada.asianetnews.com/karnataka-districts/farmers-happy-quintal-of-groundnuts-is-sold-for-over-rs-11000-gajendragadh-mrq/articleshow-7m7k1dv</link>
            <guid isPermaLink="true">https://kannada.asianetnews.com/karnataka-districts/farmers-happy-quintal-of-groundnuts-is-sold-for-over-rs-11000-gajendragadh-mrq/articleshow-7m7k1dv</guid>
            <pubDate>Sun, 25 Jan 2026 10:37:24 +0530</pubDate>
            <description><![CDATA[&lt;p&gt;ಗಜೇಂದ್ರಗಡದಲ್ಲಿ ಬಡವರ ಬಾದಾಮಿ ಎಂದೇ ಖ್ಯಾತವಾದ ಶೇಂಗಾ ಬೆಲೆಯು ಕ್ವಿಂಟಲ್&zwnj;ಗೆ ₹11,000ದ ಗಡಿ ತಲುಪಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ವರ್ಷ ಉತ್ತಮ ಮಳೆ ಹಾಗೂ ಉತ್ತಮ ಇಳುವರಿ ಬಂದಿದ್ದು, ಜೊತೆಗೆ ಮಾರುಕಟ್ಟೆಯಲ್ಲಿ ದಾಖಲೆಯ ಬೆಲೆ ಸಿಕ್ಕಿರುವುದು ರೈತರ ಸಂಕಷ್ಟವನ್ನು ದೂರಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kfsrn5j042qzwyyhhcmkn15w,imgname-shenga-1769317504576.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಎಂ. ಸೈಯದ್&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ಬಡವರ ಬಾದಾಮಿ ಎಂದೇ ಖ್ಯಾತಿ ಪಡೆದಿರುವ ಶೇಂಗಾ ಕ್ವಿಂಟಲ್&zwnj;ಗೆ ₹11 ಸಾವಿರದ ಗಡಿ ತಲುಪಿದ್ದು, ಉತ್ತಮ ಧಾರಣೆಯಿಂದ ರೈತರು ಖುಷಿಯಾಗಿದ್ದಾರೆ.&lt;/p&gt;&lt;p&gt;ಈ ವರ್ಷ ಕ್ವಿಂಟಲ್&zwnj; ಗೆಜ್ಜೆ ಶೇಂಗಾಕ್ಕೆ ಇಲ್ಲಿಯವರೆಗೆ ಅತಿಹೆಚ್ಚು ಅಂದರೆ ₹6000ರಿಂದ 8500ರ ವರೆಗೆ ಮಾರಾಟವಾಗಿದೆ. ಆದರೆ ಶನಿವಾರ ಪಟ್ಟಣದ ಎಪಿಎಂಸಿಯಲ್ಲಿ ದಿಢೀರ್&zwnj; ಕ್ವಿಂಟಲ್&zwnj; ಶೇಂಗಾ ದರ ₹10,866ಕ್ಕೆ ತಲುಪಿದೆ. ಇದು ಪಟ್ಟಣದ ಎಪಿಎಂಸಿಯಲ್ಲೇ ಅತ್ಯಧಿಕ ದರ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಬೆಲೆ ಹೆಚ್ಚಳಕ್ಕೆ ಕಾರಣವೇನು?&lt;/strong&gt;&lt;/h2&gt;&lt;p&gt;ಮಾರುಕಟ್ಟೆಗೆ ಶೇಂಗಾ ಆವಕ ಆರಂಭಿಕ ಹಂತದಲ್ಲಿದೆ. ಹೀಗಾಗಿ ಉತ್ತಮ ದರ ರೈತರ ಫಸಲಿಗೆ ಸಿಕ್ಕಿದೆ. ಫೆಬ್ರವರಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಶೇಂಗಾ ಮಾರುಕಟ್ಟೆಗೆ ಬರಲಿದೆ. ಆಗ ಈಗಿರುವ ದರ ಸಿಗುತ್ತದೆ ಎಂದು ಹೇಳಲಾಗದು ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.&lt;/p&gt;&lt;h3&gt;&lt;strong&gt;ಕೈಸುಟ್ಟುಕೊಂಡಿದ್ದ ರೈತರು&lt;/strong&gt;&lt;/h3&gt;&lt;p&gt;ತಾಲೂಕಿನಲ್ಲಿ ಕಳೆದ ವರ್ಷ ನಿರೀಕ್ಷಿತ ಪ್ರಮಾಣದ ಮಳೆಯಾಗದ ಹಿನ್ನೆಲೆ ಶೇಂಗಾ ಬೆಳೆದು ಕೈ ಸುಟ್ಟುಕೊಂಡಿದ್ದ ರೈತರ ದನ ಕರುಗಳಿಗೂ ಹೊಟ್ಟು ಸಿಕ್ಕಿರಲಿಲ್ಲ. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣಕಿಂತಲೂ ಹೆಚ್ಚಿಗೆ ಮಳೆಯಾಗಿದ್ದರಿಂದ ಅಂತರ್ಜಲದ ಪ್ರಮಾಣ ಹೆಚ್ಚಾಗಿ ಉತ್ತಮ ಫಸಲು ಬಂದಿದೆ. ಇನ್ನೊಂದೆಡೆ ಬಂಪರ್ ಬೆಲೆ ಸಿಕ್ಕಿದ್ದು, ರೈತ ಸಮೂಹದ ಹರ್ಷಕ್ಕೆ ಕಾರಣವಾಗಿದೆ.&lt;/p&gt;&lt;p&gt;ತಾಲೂಕಿನಲ್ಲಿ ಹೇಳಿಕೊಳ್ಳುವ ನೀರಿನ ಮೂಲಗಳಿಲ್ಲ. ಇದರ ಪರಿಣಾಮ ಉತ್ತಮ ಫಸಲು ಬಂದಾಗ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದರೆ, ಇತ್ತ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಬಂದಾಗ ಮಳೆ ಕೊರತೆಯಿಂದ ಫಸಲು ಕೈಕೊಡುತಿತ್ತು. ಹೀಗಾಗಿ ಹಲ್ಲಿದ್ದಾಗ ಕಡಲೆ ಇಲ್ಲ, ಕಡಲೆ ಇದ್ದಾಗ ಹಲ್ಲಿಲ್ಲ ಎನ್ನುವ ಪರಿಸ್ಥಿತಿಯಲ್ಲಿ ರೈತರಿದ್ದರು.&lt;/p&gt;&lt;h3&gt;&lt;strong&gt;ಉತ್ತಮ ಮಳೆ, ಇಳುವರಿ&lt;/strong&gt;&lt;/h3&gt;&lt;p&gt;ಪ್ರಸಕ್ತ ವರ್ಷ ಮಳೆಯೂ ಉತ್ತಮವಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆಯೂ ಏರಿದ್ದು, ರೈತರಲ್ಲಿ ಖುಷಿ ತಂದಿದೆ. ಇದೇ ಬೆಲೆ ಮುಂದುವರಿದರೆ ಮಾತ್ರ ತಾಲೂಕಿನ ರೈತರು ಕೈಗೆ ಮತ್ತಷ್ಟು ಬಲ ಬರಲಿದೆ ಎನ್ನುತ್ತಾರೆ ಕಾಲಕಾಲೇಶ್ವರ, ರಾಜೂರ, ಸೂಡಿ, ಉಣಚಗೇರಿ, ವದೆಗೋಳ, ಜಿಗೇರಿ, ಕೊಡಗಾನೂರ, ರಾಂಪೂರ, ದಿಂಡೂರ, ಹಾಲಕೆರೆ ಸೇರಿ ತಾಲೂಕಿನ ರೈತರು.&lt;/p&gt;&lt;h3&gt;&lt;strong&gt;ವ್ಯಾಪಾರಸ್ಥರಿಗೂ ಖುಷಿ&lt;/strong&gt;&lt;/h3&gt;&lt;p&gt;ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಎರಡು ವರ್ಷದ ಹಿಂದೆ ಒಂದು ಕ್ವಿಂಟಲ್ ಶೇಂಗಾಕ್ಕೆ ₹೬ ಸಾವಿರದಿಂದ ₹೮ ಸಾವಿರದವರೆಗೆ ಮಾರಾಟವಾಗಿತ್ತು. ಶನಿವಾರ ಕ್ವಿಂಟಲ್ ಶೇಂಗಾಕ್ಕೆ ₹೧೦,೮೬೬ ಬಂದಿದೆ. ಜಮೀನಿನಲ್ಲಿ ಶೇಂಗಾ ಬಿತ್ತನೆಯಿಂದ ಹಿಡಿದು ಫಸಲು ಕಟಾವಿನವರೆಗೆ ಗೊಬ್ಬರ, ಕೆಲಸಕ್ಕೆ ಸಿಗದ ಆಳು, ಮಾರುಕಟ್ಟೆ ಬೆಲೆ ಕುಸಿತ ಸೇರಿ ಇತರ ಸಂಕಷ್ಟವನ್ನೇ ಎದುರಿಸುವ ರೈತರು ಶನಿವಾರ ಶೇಂಗಾಕ್ಕೆ ಬಂಪರ್ ಬೆಲೆ ಬಂದಿದ್ದು ಖುಷಿ ತಂದಿದೆ ಎಂದು ವಿನಾಯಕ ಟ್ರೇಡಿಂಗ್ ಕಂಪನಿಯ ನಾಗರಾಜ ಹೊಸಗಂಡಿ ಹಾಗೂ ಭೀಮಾಂಬೀಕಾ ಟ್ರೇಡಿಂಗ್&zwnj;ನ ಜಗದೀಶ ಕಲ್ಗುಡಿ ತಿಳಿಸಿದರು.&lt;/p&gt;&lt;h3&gt;&lt;strong&gt;ಕಷ್ಟ ದೂರವಾಗಲಿದೆ&lt;/strong&gt;&lt;/h3&gt;&lt;p&gt;ಕಳೆದ 15 ವರ್ಷಗಳಿಂದ ಶೇಂಗಾ ಬೆಳೆಯುತ್ತಿದ್ದೇವೆ. ಕ್ವಿಂಟಲ್&zwnj;ಗೆ ₹೨ ಸಾವಿರದಿಂದ ₹೬ ಸಾವಿರ ಮಾತ್ರ ಸಿಕ್ಕಿತ್ತು. ಹೀಗಾಗಿ ಪ್ರತಿವರ್ಷ ಬಿತ್ತನೆಯಿಂದ ಹಿಡಿದು ಎಪಿಎಂಸಿಗೆ ತಂದು ಮಾರಿದಾಗ ಸಿಗುವ ಬೆಲೆ ಅಷ್ಟಕಷ್ಟೇ ಎನ್ನುವಂತಾಗಿತ್ತು. ಆದರೆ ಶನಿವಾರ ಎಪಿಎಂಸಿ ಮಾರುಕಟ್ಟೆಗೆ ತಂದಿದ್ದ ಗೆಜ್ಜೆ ಶೇಂಗಾ ಬೆಳೆಗೆ ಸಿಕ್ಕಿರುವ ಬೆಲೆ ಕೇಳಿ ಖುಷಿ ತಂದಿದ್ದು, ಅಲ್ಪಸ್ವಲ್ಪ ಕಷ್ಟವನ್ನು ಕಳೆದುಕೊಳ್ಳಲು ಸಹಾಯವಾಗಿದೆ ಎನ್ನುತ್ತಾರೆ ರೈತರಾದ ಹನುಮೇಶ ಮಸಾಲಿ, ಸುರೇಶ ನಾಗರಾಳ ಅವರು.&lt;/p&gt;&lt;h3&gt;&lt;strong&gt;ಉತ್ತಮ ಬೆಲೆ&lt;/strong&gt;&lt;/h3&gt;&lt;p&gt;ಎಪಿಎಂಸಿ ಮಾರುಕಟ್ಟೆಗೆ ಬರುವ ಶೇಂಗಾ ಬೆಳೆಗೆ ಪ್ರತಿವರ್ಷವೂ ಆರಂಭದ ದಿನದಲ್ಲಿ ಉತ್ತಮ ಬೆಲೆ ಸಿಗುತ್ತದೆ. ಶನಿವಾರ ಗಜೇಂದ್ರಗಡ ಎಪಿಎಂಸಿ ಮಾರುಕಟ್ಟೆಯಲ್ಲಿ ಶೇಂಗಾ ಬೆಳೆಗೆ ಸುಮಾರು ₹೧೧ ಸಾವಿರದವರೆಗೆ ಬೆಲೆ ಸಿಕ್ಕಿದ್ದು ಖುಷಿ ತಂದಿದೆ ಎಂದು ಕಾಲಕಾಲೇಶ್ವರ ಗ್ರಾಮದ ರೈತರಾದ ಶಶಿಧರ ಹೂಗಾರ ಹಾಗೂ ನರಸಿಂಗ್&zwnj;ರಾವ್ ಘೋರ್ಪಡೆ ತಿಳಿಸಿದರು.&lt;/p&gt;&lt;h3&gt;&lt;strong&gt;ಫೆಬ್ರವರಿಯಲ್ಲಿ ಗೊತ್ತಾಗಲಿದೆ&lt;/strong&gt;&lt;/h3&gt;&lt;p&gt;ಗಜೇಂದ್ರಗಡದ ಎಪಿಎಂಸಿಗೆ ಬರೀ ತಾಲೂಕಿನ ರೈತರು ಅಷ್ಟೇ ಅಲ್ಲದೇ, ರೋಣ, ಯಲಬುರ್ಗಾ, ಕುಷ್ಟಗಿ ತಾಲೂಕಿನ ಶೇಂಗಾ ಮಾರಾಟ ಮಾಡಲು ಆಗಮಿಸುತ್ತಾರೆ. ಇದೇ ದರ ಮುಂದುವರಿಯುತ್ತದೆಯೇ ಎಂಬುದು ಫೆಬ್ರವರಿಯಲ್ಲಿ ಗೊತ್ತಾಗಲಿದೆ ಎಂದು ಎಪಿಎಂಸಿ ಪ್ರಭಾರ ಕಾರ್ಯದರ್ಶಿ(ಹೊಳೆಆಲೂರು) ಸುವರ್ಣಾ ವಾಲಿಕಾರ ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/farmers-happy-quintal-of-groundnuts-is-sold-for-over-rs-11000-gajendragadh-mrq/articleshow-7m7k1dv"/>
        </item>
        <item>
            <title><![CDATA[ಅರ್ಧಕ್ಕೆ ನಿಂತ ಗ್ರಾಮದ ದೇಗುಲ ನಿರ್ಮಾಣಕ್ಕೆ ₹2.50 ಲಕ್ಷ  ನೀಡಿದ 850 ‘ಗೃಹಲಕ್ಷ್ಮೀ’ಯರು]]></title>
            <link>https://kannada.asianetnews.com/karnataka-districts/gruha-lakshmi-scheme-850-women-donated-money-for-the-construction-of-a-half-built-timmapur-village-temple-gadag-mrq/articleshow-00c6koq</link>
            <guid isPermaLink="true">https://kannada.asianetnews.com/karnataka-districts/gruha-lakshmi-scheme-850-women-donated-money-for-the-construction-of-a-half-built-timmapur-village-temple-gadag-mrq/articleshow-00c6koq</guid>
            <pubDate>Sun, 01 Mar 2026 08:30:05 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ, 850 ಮಹಿಳೆಯರು ತಮ್ಮ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಧಕ್ಕೆ ನಿಂತಿದ್ದ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ಸಮರ್ಪಿಸಿದ್ದಾರೆ. &amp;nbsp;ದೇಗುಲ ಕಾಮಗಾರಿಯನ್ನು ಪೂರ್ಣಗೊಳಿಸಲು ಈ ಮಹಿಳೆಯರು ಒಟ್ಟು ₹16 ಲಕ್ಷ ದೇಣಿಗೆ ನೀಡಲು ಮುಂದಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjkna80avqspn4ztvaftsvt8,imgname-gruha-lakshmi-1772333899786.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ತಮ್ಮ ಊರಿನಲ್ಲಿ ಅರ್ಧಕ್ಕೆ ನಿಂತ ಯಲ್ಲಮ್ಮ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ 850 ಮಹಿಳೆಯರು ತಮಗೆ ಸರ್ಕಾರ ನೀಡಿದ್ದ ಗೃಹಲಕ್ಷ್ಮಿ ಹಣವನ್ನು ಸಮರ್ಪಿಸಿರುವ ಪ್ರಸಂಗ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ತಿಮ್ಮಾಪೂರದಲ್ಲಿ ಕಳೆದ 4 ವರ್ಷದಿಂದ ಯಲ್ಲಮ್ಮ ದೇವಸ್ಥಾನ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಗ್ರಾಮಸ್ಥರು ₹50 ಲಕ್ಷ ವೆಚ್ಚ ಮಾಡಿದ್ದಾರೆ. ಹಣದ ಕೊರತೆಯಿಂದಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಮಂದಿರ ಪೂರ್ಣಗೊಳ್ಳಲು ಲಕ್ಷಾಂತರ ಅಗತ್ಯವಿದ್ದು, ಗ್ರಾಮದ 850 ಮಹಿಳೆಯರು ತಮ್ಮ ಖಾತೆಗೆ ಜಮೆಯಾಗುವ ಗೃಹಲಕ್ಷ್ಮಿ ಹಣವನ್ನು ನೀಡುವ ಮೂಲಕ ರಾಜ್ಯದ ಗಮಸ ಸೆಳೆದಿದ್ದಾರೆ.&amp;nbsp;&lt;/p&gt;&lt;h2&gt;&lt;strong&gt;₹2.50 ಲಕ್ಷ ದೇಣಿಗೆ&lt;/strong&gt;&lt;/h2&gt;&lt;p&gt;850 ಗೃಹಲಕ್ಷ್ಮಿ ಫಲಾನುಭವಿಗಳು ತಮಗೆ ಬರುವ ಹಣವನ್ನು ಸಂಗ್ರಹಿಸಿ ಈಗಾಗಲೇ ₹2.50 ಲಕ್ಷ ದೇಣಿಗೆ ನೀಡಿದ್ದು, ಒಟ್ಟು ₹16 ಲಕ್ಷ ನೀಡಲಿದ್ದಾರೆ. ಈ ನಿರ್ಧಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್&zwnj; ಸಂಸತ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಮೃತರ ಖಾತೆಗೆ ಗೃಹಲಕ್ಷ್ಮೀ ಹಣ ಬಗ್ಗೆ ಪರಿಶೀಲನೆ: ಲಾಡ್&zwnj;&lt;/strong&gt;&lt;/h3&gt;&lt;p&gt;ಬೆಂಗಳೂರು: ಕೆಲವೆಡೆ ಮೃತಪಟ್ಟವರ ಖಾತೆಗೆ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಯ ಹಣ ಜಮಾ ಆಗಿರಬಹುದು. ಸಂಬಂಧಪಟ್ಟ ಇಲಾಖೆಯವರು ಅದನ್ನು ಪರಿಶೀಲಿಸುತ್ತಾರೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, 1.30 ಕೋಟಿ ಫಲಾನುಭವಿಗಳಲ್ಲಿ ಶೇ.0.1 ಅಥವಾ ಶೇ.0.2ರಷ್ಟು ಕೇಸ್&zwnj;ಗಳಲ್ಲಿ ಲೋಪ ಆಗಿರುತ್ತವೆ. ಆದರೆ, ದುರುಪಯೋಗ ಆಗಿರುವ ಸಾಧ್ಯತೆ ಬಹಳ ಕಡಿಮೆ ಎಂದರು.&amp;nbsp;&lt;/p&gt;&lt;p&gt;ಸಚಿವ ಸಂಪುಟದಲ್ಲಿ 56,000 ಹುದ್ದೆಗಳ ನೇಮಕಾತಿಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಆದರೆ, ಎಷ್ಟು ದಿನಗಳಲ್ಲಿ ನೇಮಕಾತಿ ಮಾಡಲಾಗುತ್ತದೆ ಎಂಬುದರ ಕುರಿತು ಇನ್ನೆರಡು ವಾರಗಳಲ್ಲಿ ಸ್ಪಷ್ಟತೆ ಸಿಗಲಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gruha-lakshmi-scheme-850-women-donated-money-for-the-construction-of-a-half-built-timmapur-village-temple-gadag-mrq/articleshow-00c6koq"/>
        </item>
        <item>
            <title><![CDATA[ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?]]></title>
            <link>https://kannada.asianetnews.com/karnataka-districts/lakkundi-gold-case-new-demand-from-ritti-family-for-giving-one-5th-of-money-in-8-crores-suc/articleshow-07a0fhy</link>
            <guid isPermaLink="true">https://kannada.asianetnews.com/karnataka-districts/lakkundi-gold-case-new-demand-from-ritti-family-for-giving-one-5th-of-money-in-8-crores-suc/articleshow-07a0fhy</guid>
            <pubDate>Thu, 12 Mar 2026 14:16:42 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕಿದ್ದ ಚಿನ್ನದ ನಿಧಿಯ ಮೌಲ್ಯ 8 ಕೋಟಿ ಎಂದು ತಜ್ಞರು ಅಂದಾಜಿಸಿದ್ದಾರೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದ ರಿತ್ತಿ ಕುಟುಂಬ, ಇದೀಗ ಕಾನೂನಿನ ಪ್ರಕಾರ ಹೊಸ ಬೇಡಿಕೆ ಇಟ್ಟಿದ್ದಾರೆ. ಏನದು?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkgkk0nsyawcqjcp46zmpmr6,imgname-lakkundi-1773305168569.jpg" type="image/jpeg" height="390" width="690"/>
            <content:encoded><![CDATA[&lt;p&gt;ಎರಡು ತಿಂಗಳ ಹಿಂದೆ ಗದಗ ಜಿಲ್ಲೆಯ ಲಕ್ಕುಂಡಿ ಸಕತ್​ ಸದ್ದು ಮಾಡಿತ್ತು. ಇಲ್ಲಿ ಪ್ರಜ್ವಲ್ ರಿತ್ತಿ ಅವರ ಮನೆಯ ಕೆಲಸವನ್ನು ಮಾಡುವ ಸಂದರ್ಭದಲ್ಲಿ ಚಿನ್ನದ ನಿಧಿಯೇ ಸಿಕ್ಕಿತ್ತು. ಅಂದಿನಿಂದ ಲಕ್ಕುಂಡಿ ಕರ್ನಾಟಕ ಮಾತ್ರವಲ್ಲದೇ ಕರ್ನಾಟಕದ ಹೊರಗೂ ಸಕತ್​ ಸೌಂಡ್​ ಮಾಡುತ್ತಲೇ ಇದೆ. ಈಗಲೂ ಲಕ್ಕುಂಡಿಗೆ ಬೇರೆ ಬೇರೆ ಭಾಗಗಳಿಂದ ಜನರು ಬರುತ್ತಲೇ ಇದ್ದಾರೆ. ಎರಡು ತಿಂಗಳಿನಿಂದ ತುಂಬಾ ಸದ್ದು ಮಾಡಿದ್ದ ಲಕ್ಕುಂಡಿ ಸದ್ಯ ಮೌನವಾಗಿತ್ತು. ಆದರೆ ಇದೀಗ ಮತ್ತೆ ಪುಟಿದೆದ್ದಿದೆ. ಇದಕ್ಕೆ ಕಾರಣ, 8 ಕೋಟಿಯ ರಹಸ್ಯ! ಈ ನಿಧಿ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಸಿಕ್ಕಿರುವುದೇ ಇದಕ್ಕೆ ಕಾರಣ.&lt;/p&gt;&lt;h2&gt;&lt;strong&gt;ಸಿಕ್ಕಿದ್ದೆಷ್ಟು?&lt;/strong&gt;&lt;/h2&gt;&lt;p&gt;ಅಷ್ಟಕ್ಕೂ ಆಗಿದ್ದು ಏನೆಂದರೆ, ಇಲ್ಲಿ ಸಿಕ್ಕಿರುವ ಚಿನ್ನಾಭರಣಗಳು ಮತ್ತು ಇತರ ಸಾಮಗ್ರಿಗಳ ಬೆಲೆಯನ್ನು ಕಂಡುಹಿಡಿಯಲು ನೇಮಕ ಮಾಡಿರುವ ತಜ್ಞರು ಇದು ಸುಮಾರು 8 ಕೋಟಿ ಬೆಲೆ ಬಾಳುವಂಥದ್ದು ಎಂದು ವರದಿ ಕೊಟ್ಟಿದ್ದಾರೆ. ಇಲ್ಲಿಯವರೆಗೆ ಅದರ ನಿಖರ ಬೆಲೆ ತಿಳಿದಿರಲಿಲ್ಲ. ಅಷ್ಟಕ್ಕೂ ರಿತ್ತಿ ಕುಟುಂಬಕ್ಕೆ ಸಿಕ್ಕಿದ್ದು ಸುಮಾರು 466 ಗ್ರಾಂ ತೂಕದ ಪುರಾತನ ಚಿನ್ನದ ಆಭರಣಗಳು ಮತ್ತು ಇತರ 22 ವಸ್ತುಗಳು. ಅವುಗಳನ್ನು ಸಂಪೂರ್ಣವಾಗಿ ಸರ್ಕಾರದ ವಶಕ್ಕೆ ಕೊಟ್ಟಿತ್ತು ಕುಟುಂಬ. ಪ್ರಾಮಾಣಿಕವಾಗಿ ಮೆರೆದಿದ್ದರು ಅವರು. ಅದರ ಬಳಿಕ ಲಕ್ಕುಂಡಿ ಗ್ರಾಮದ ಇತಿಹಾಸದ ಬಗ್ಗೆ ಸಂಶೋಧನೆಗಳೇ ನಡೆದವು. ಆ ಚಿನ್ನಾಭರಣಗಳನ್ನು ಪರಿಶೀಲನೆ ಮಾಡಿದಾಗ, ಅವು ಸುಮಾರು 500-600 ವರ್ಷಗಳಷ್ಟು ಹಳೆಯದ್ದು ಎಂದು ಕಂಡು ಹಿಡಿಯಲಾಗಿದೆ. ಇದು ವಿಜಯನಗರ ಅಥವಾ ಚಾಲುಕ್ಯ ಕಾಲದ್ದು ಎನ್ನುವುದು ತಿಳಿದುಬಂದಿದೆ.&lt;/p&gt;&lt;h3&gt;&lt;strong&gt;8 ಕೋಟಿಯ ಅಂದಾಜು&lt;/strong&gt;&lt;/h3&gt;&lt;p&gt;ಇದೀಗ ಅದರ ಮೌಲ್ಯಮಾಪನ ಮಾಡಿದಾಗ ಈ ಆ್ಯಂಟಿಕ್ ಆಭರಣಗಳು ಸುಮಾರು 8 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಆದ್ದರಿಂದ ಇದೀಗ ರಿತ್ತಿ ಕುಟುಂಬ ತಜ್ಞರು ವ್ಯಕ್ತಪಡಿಸಿದ ಬೆಲೆಯಲ್ಲಿ ನಮಗೆ ಒಂದು ಭಾಗ ಬೇಕು. 8 ಕೋಟಿ ಮೊತ್ತದಲ್ಲಿ ಐದರ ಒಂದು ಭಾಗ ತಮಗೆ ಬೇಕು ಎಂದು ಕೇಳುತ್ತಿದ್ದಾರೆ. ಅಷ್ಟಕ್ಕೂ ಕಾನೂನಿನ ಅಡಿಯಲ್ಲಿಯೂ ಕೆಲವೊಂದು ಅವಕಾಶಗಳು ಇವೆ. ನಿಧಿಯ ಬಗ್ಗೆ ಕೆಲವೊಂದು ನಿಯಮಗಳು ಇದ್ದು, ಕೆಲವು ಸಂದರ್ಭಗಳಲ್ಲಿ ಸಂಪೂರ್ಣ ಚಿನ್ನಾಭರಣ ಯಾರಿಗೆ ಸಿಕ್ಕಿದೆಯೋ ಅವರ ಪಾಲಾಗುತ್ತದೆ ಎಂದು ಇದ್ದರೆ, ಕೆಲವು ಸಂದರ್ಭಗಳಲ್ಲಿ ಇಷ್ಟು ಪಾಲನ್ನು ಅವರಿಗೆ ನೀಡಬೇಕು ಎಂದು ಇದೆ. ಈಗ ನಮಗೆ ಐದರ ಒಂದು ಭಾಗ ಬೇಕು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಪ್ರಾಮಾಣಿಕ ಕೆಲಸ ಮಾಡಿದ್ದೇವೆ&lt;/strong&gt;&lt;/h3&gt;&lt;p&gt;ನಾವು ಪ್ರಾಮಾಣಿಕವಾಗಿ ಭೂಮಿಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದೇವೆ. ಈಗ ಸರ್ಕಾರ ಕೂಡ ಪ್ರಾಮಾಣಿಕವಾಗಿ ನಮಗೆ ಇಷ್ಟು ಹಣವನ್ನು ನೋಡಬೇಕು. ಐದರಲ್ಲಿ ಒಂದು ಭಾಗ ಎಂದರೆ ಸುಮಾರು 1.6 ಕೋಟಿ ರೂಪಾಯಿ ನೀಡಬೇಕು. ಈಗಿನ ಬೆಲೆಗೆ ನಾವು ಅದನ್ನು ಒಪ್ಪಲ್ಲ, ಆ್ಯಂಟಿಕ್ ಮೌಲ್ಯ ಎಷ್ಟಿದೆಯೋ ಅಷ್ಟೇ ಬೇಕು ಎಂದಿದ್ದಾರೆ. ಏಕೆಂದರೆ, ಇದು ಆ್ಯಂಟಿಕ್​ ಪೀಸ್ ಆಗಿರುವುದರಿಂದ ಇದರ ಮೌಲ್ಯ 8-10 ಪಟ್ಟು ಹೆಚ್ಚಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಸರ್ಕಾರ, ಈ ಹಿಂದೆ ನೀಡಿದ್ದ ಭರವಸೆಯಂತೆ ಮನೆ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ರಿಕ್ತಿ ಕುಟುಂಬಕ್ಕೆ ಮುಂಜೂರು ಮಾಡಿದೆ. ಈಗ ಈ ಹೊಸ ಬೇಡಿಕೆಯನ್ನು ಕುಟುಂಬ ಮುಂದಿಟ್ಟಿದೆ.&lt;/p&gt;]]></content:encoded>
            <category>gadag</category>
            <dc:creator>Suchethana D</dc:creator>
            <atom:link href="https://kannada.asianetnews.com/karnataka-districts/lakkundi-gold-case-new-demand-from-ritti-family-for-giving-one-5th-of-money-in-8-crores-suc/articleshow-07a0fhy"/>
        </item>
        <item>
            <title><![CDATA[ಗದಗ: ಜಮೀನಿನಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ: ಕಲ್ಲು ತೂರಾಟ..]]></title>
            <link>https://kannada.asianetnews.com/state/gadag-news-clashes-between-two-communities-over-drinking-water-on-a-farm/articleshow-23l1g8d</link>
            <guid isPermaLink="true">https://kannada.asianetnews.com/state/gadag-news-clashes-between-two-communities-over-drinking-water-on-a-farm/articleshow-23l1g8d</guid>
            <pubDate>Mon, 23 Mar 2026 22:49:47 +0530</pubDate>
            <description><![CDATA[&lt;p&gt;ಜಮೀನಿನಲ್ಲಿ ನೀರು ಕುಡಿದ ವಿಚಾರಕ್ಕೆ ಎಸ್&zwnj;ಸಿ ಮತ್ತು ಎಸ್&zwnj;ಟಿ ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಈ ಘರ್ಷಣೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಿದ್ದು, ಎರಡೂ ಕಡೆಯ 15 ಜನರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmdvazsbgy81a251fyern41p,imgname-gadag-casteism-dispute-1774286372651.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಜಮೀನಿನಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ&lt;/strong&gt;&lt;/h2&gt;&lt;p&gt;ಗದಗ: 21 ಶತಮಾನದಲ್ಲಿ ನಾವು ವಾಸ ಮಾಡುತ್ತಿದ್ದರು ಜಾತಿಯ ಭೂತ ನಮ್ಮ ಹಳ್ಳಿಗಳನ್ನೂ ಇನ್ನೂ ಬಿಟ್ಟಿಲ್ಲ, ಅಂತರ್ಜಾತಿ ವಿವಾಹವಾದವರನ್ನು ಬೇರೆ ಜಾತಿಯ ಯುವಕ/ಯುವತಿಯನ್ನು ಪ್ರೀತಿ ಮಾಡಿದವರ ಕತೆಯನ್ನೇ ಮುಗಿಸಿದಂತಹ ಹಲವು ಘಟನೆಯಗಳು ನಮ್ಮ ರಾಜ್ಯದಲ್ಲಿ ನಡೆದಿವೆ. ಕಾನೂನುಗಳು ಎಷ್ಟೇ ಮುಂದುವರೆದರೂ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಹಾಗೆಯೇ ಈಗ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿಯಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಂತಹ ನಾಚಿಕೆಗೇಡಿನ ಘಟನೆ ನಡೆದಿದೆ.&lt;/p&gt;&lt;h3&gt;&lt;strong&gt;ಎರಡು ಸಮುದಾಯಗಳ ಮಧ್ಯೆ ಹೊಡೆದಾಟ: ಕಲ್ಲು ತೂರಾಟ:&lt;/strong&gt;&lt;/h3&gt;&lt;p&gt;ಹೌದು ಎಸ್&zwnj;ಸಿ ಹಾಗೂ ಎಸ್&zwnj;ಟಿ ಸಮುದಾಯದ ಮಧ್ಯೆ ಈ ಗಲಾಟೆ ನಡೆದಿದ್ದು, ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ. ಆತ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ವಾಲ್ಮೀಕಿ ಸಮುದಾಯದ ರೈತ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇ ವಿಚಾರ ಊರೆಲ್ಲಾ ಹಬ್ಬಿ ಈ ಎರಡು ಸಮುದಾಯಗಳ ನಡುವೆ ದೊಡ್ಡ ಗಲಾಟೆ ನಡೆದಿದೆ. ಪರಸ್ಪರ ಹೊಡೆದಾಡಿಕೊಂಡ ಎರಡು ಗುಂಪುಗಳ ಜನ ಕಲ್ಲು ತೂರಾಟವನ್ನು ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಎರಡೂ ಗುಂಪಿನ 15 ಜನರಿಗೆ ಗಾಯಗಳಾಗಿದ್ದು, ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ&zwnj; ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್&zwnj;ಪಿ ರೋಹನ್ ಜಗದೀಶ್ ಅವರು ಭೇಟಿ ನೀಡಿದ್ದು, ಸ್ಥಳದಲ್ಲಿ ಮಾಹಿತಿ ಪೊಲೀಸರನ್ನು ನಿಯೋಜಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುತ್ತು ಅನ್ನಕ್ಕಾಗಿ ಸುರಿಯುವ ಮಳೆ ಲೆಕ್ಕಿಸದೇ ಚಳಿಯಲ್ಲೇ ನಡುಗುತ್ತಾ ಸಾಲುಗಟ್ಟಿ ನಿಂತ ಪುಟ್ಟ ಪುಟ್ಟ ಮಕ್ಕಳು&lt;/strong&gt;&lt;/p&gt;&lt;p&gt;ನೀರನ್ನು ಯಾರಿಂದಲೂ ಸೃಷ್ಟಿಸಲಾಗದು, ಅದು ಪ್ರಕೃತಿಯ ಕೊಡುಗೆ ಇಂದು ಜಮೀನಿನಲ್ಲಿರುವ ನೀರು ನಾಳೆಯೂ ಇರುವುದು ಎಂದು ಹೇಳುವುದಕ್ಕೆ ಸಾಧ್ಯವಿಲ್ಲ, ಇಲ್ಲದೇ ಹೋದರೇ ಮನುಷ್ಯರು ಅದನ್ನೂ ಸೃಷ್ಟಿಸಲಾಗದು ಅದೆಲ್ಲವೂ ಪ್ರಕೃತಿಯ ಆಶೀರ್ವಾದ ಹೀಗಿದ್ದೂ ಮನುಷ್ಯರು ಜಾತಿ ಈ ಜಾತಿ ಎಂದು ಹೊಡೆದಾಡುವುದರ ಜೊತೆಗೆ ಕೇವಲ ನೀರು ಕುಡಿದಿದ್ದಕ್ಕೆ ಇಡೀ ಊರಲ್ಲಿ ಜಾತಿ ದ್ವೇಷದ ಬೆಂಕಿ ಹಚ್ಚಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿಯಾಗಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯುಗಾದಿಗೆ ತಂದ ಮಟನ್ ತಲೆಮಾಂಸ ಬೆಂದಿಲ್ಲ ಅಂತ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Anusha Kb</dc:creator>
            <atom:link href="https://kannada.asianetnews.com/state/gadag-news-clashes-between-two-communities-over-drinking-water-on-a-farm/articleshow-23l1g8d"/>
        </item>
        <item>
            <title><![CDATA[ಸಿಲಿಂಡರ್ ಕೊರತೆಗೆ ಕೇಂದ್ರ ಸರ್ಕಾರ ಕಾರಣ: ಸಚಿವ ಕೆ.ಜೆ.ಜಾರ್ಜ್ ಆಕ್ರೋಶ]]></title>
            <link>https://kannada.asianetnews.com/politics/gas-cylinder-shortage-india-kj-george-blames-central-govt-gvd/articleshow-4li8qum</link>
            <guid isPermaLink="true">https://kannada.asianetnews.com/politics/gas-cylinder-shortage-india-kj-george-blames-central-govt-gvd/articleshow-4li8qum</guid>
            <pubDate>Tue, 17 Mar 2026 22:35:12 +0530</pubDate>
            <description><![CDATA[&lt;p&gt;ಸಿಲಿಂಡರ್ ಅಭಾವದ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳದ ಕಾರಣವೇ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jx0ahssbk7ecsx5n1a1wyzt1,imgname-bgnng-1749136500523.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.17): &lt;/strong&gt;ದೇಶದಲ್ಲಿ ಉಂಟಾಗಿರುವ ಸಿಲಿಂಡರ್ ಅಭಾವದ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳದ ಕಾರಣವೇ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಲಿಂಡರ್ ಕೊರತೆ ವಿಚಾರವಾಗಿ ಈಗಾಗಲೇ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.&lt;/p&gt;&lt;p&gt;ಈ ಬಿಕ್ಕಟ್ಟನ್ನು ನಿವಾರಿಸಲು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕಿದೆ ಎಂದರು. ಅಧಿವೇಶನದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದೆ ಎಂಬ ಸಂಸದ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಜಾರ್ಜ್, ರಾಜ್ಯ ಸರ್ಕಾರದಲ್ಲಿ ಯಾವುದೇ ಬದಲಾವಣೆ ಅಥವಾ ಗೊಂದಲಗಳಿಲ್ಲ. ಬೊಮ್ಮಾಯಿ ಅವರ ಮಾತಿನಂತೆ ನಾವು ಸರ್ಕಾರ ನಡೆಸಲು ಸಾಧ್ಯವಿಲ್ಲ.&lt;/p&gt;&lt;p&gt;ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದವರು. ಬಿಜೆಪಿಯ ಒಳಗಿನ ಪರಿಸ್ಥಿತಿ ಏನಿದೆ ಎಂಬುದು ಅವರಿಗೇ ಚೆನ್ನಾಗಿ ತಿಳಿದಿದೆ. ನಮ್ಮಲ್ಲಿ ಯಾವುದೇ ಅಲ್ಲೋಲ ಕಲ್ಲೋಲವಿಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಸಂಪೂರ್ಣವಾಗಿ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ. ಆ ಬಗ್ಗೆ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.&lt;/p&gt;&lt;h2&gt;&lt;strong&gt;ಆಪರೇಷನ್ ಕಮಲ ಬಿಜೆಪಿಯ ಕೆಟ್ಟ ರಾಜಕಾರಣ&lt;/strong&gt;&lt;/h2&gt;&lt;p&gt;ದೇಶದ ರಾಜಕಾರಣದಲ್ಲಿ ಬಿಜೆಪಿ ಆಪರೇಷನ್ ಕಮಲ ಎಂಬ ರಾಜಕೀಯ ಪ್ರಯೋಗದ ಮೂಲಕ ಪ್ರಜಾಪ್ರಭುತ್ವವನ್ನು ಹಳಿ ತಪ್ಪಿಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳನ್ನು ಬೀಳಿಸುವುದು, ಅಡ್ಡ ಮತದಾನಕ್ಕೆ ಪ್ರೇರೇಪಿಸುವುದು ಮತ್ತು ಶಾಸಕರಿಗೆ ಆಮಿಷವೊಡ್ಡುವ ಮೂಲಕ ಅಧಿಕಾರ ಹಿಡಿಯುವುದು ಬಿಜೆಪಿಯ ಏಕೈಕ ಗುರಿಯಾಗಿದೆ.&lt;/p&gt;&lt;p&gt;ರಾಜ್ಯಸಭಾ ಚುನಾವಣೆಯಲ್ಲಿಯೂ ಇದೇ ಮಾರ್ಗ ಅನುಸರಿಸಿದ್ದಾರೆ. ಇತ್ತೀಚೆಗೆ ಬಿಡದಿಯಲ್ಲಿ ನಮ್ಮ ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣವೇ ಇದಕ್ಕೆ ಸಾಕ್ಷಿ. ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದು ಬಿಜೆಪಿಯ ಅನೈತಿಕ ಪದ್ಧತಿಗೆ ಮತ್ತೊಂದು ಉದಾಹರಣೆ ಎಂದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/gas-cylinder-shortage-india-kj-george-blames-central-govt-gvd/articleshow-4li8qum"/>
        </item>
        <item>
            <title><![CDATA[ಇಡೀ ದೇಶದ ಗಮನ ಸೆಳೆದಿದ್ದ ಲಕ್ಕುಂಡಿಯ 47 ದಿನಗಳ ಉತ್ಖನನಕ್ಕೆ ತೆರೆ; ಇಷ್ಟು ದಿನ ಸಿಕ್ಕಿದ್ದೇನು?]]></title>
            <link>https://kannada.asianetnews.com/gallery/karnataka-districts/gadag-lakkundi-excavation-which-had-captured-the-attention-of-the-entire-country-is-complete-mrq-5o5gpye</link>
            <guid isPermaLink="true">https://kannada.asianetnews.com/gallery/karnataka-districts/gadag-lakkundi-excavation-which-had-captured-the-attention-of-the-entire-country-is-complete-mrq-5o5gpye</guid>
            <pubDate>Thu, 12 Mar 2026 10:15:22 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ, ರಿತ್ತಿ ಕುಟುಂಬಕ್ಕೆ ವಿಜಯನಗರ ಕಾಲದ ಚಿನ್ನದ ನಿಧಿ ಸಿಕ್ಕಿದ ನಂತರ ಆರಂಭವಾದ 47 ದಿನಗಳ ಉತ್ಖನನ ಕಾರ್ಯವು ಅಂತ್ಯಗೊಂಡಿದೆ. &amp;nbsp;ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬವನ್ನು ಗೌರವಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkg5ctqhmxscxz3tptxkdqtb,imgname-lakkundi-1773290285809.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ, ರಿತ್ತಿ ಕುಟುಂಬಕ್ಕೆ ವಿಜಯನಗರ ಕಾಲದ ಚಿನ್ನದ ನಿಧಿ ಸಿಕ್ಕಿದ ನಂತರ ಆರಂಭವಾದ 47 ದಿನಗಳ ಉತ್ಖನನ ಕಾರ್ಯವು ಅಂತ್ಯಗೊಂಡಿದೆ. &amp;nbsp;ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬವನ್ನು ಗೌರವಿಸಲಾಗಿದೆ.&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿದ್ದ 47 ದಿನಗಳ ಉತ್ಖನನ ಕಾರ್ಯಕ್ಕೆ ತೆರೆ ಎಳೆಯಲಾಗಿದೆ. ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ನಡೆಸಲಾಗುತ್ತಿತ್ತು. ಇದೀಗ ಉತ್ಖನನ ಕಾರ್ಯವನ್ನು ನಿಲ್ಲಿಸಲಾಗಿದೆ.&lt;/p&gt;&lt;img&gt;&lt;p&gt;ಜನವರಿ 10ರಂದು ಲಕ್ಕುಂಡಿ ಗ್ರಾಮದ ರಿತ್ತಿ ಕುಟುಂಬ ತಮ್ಮ ಹಳೆಮನೆಯನ್ನು ಕೆಡವಲಾಗಿತ್ತು. ಈ ವೇಳೆ 470 ಗ್ರಾಂದಷ್ಟು ತೂಕದ ಚಿನ್ನ ಸಿಕ್ಕಿತ್ತು. ಈ ಎಲ್ಲಾ ಚಿನ್ನ ವಿಜಯನಗರ ಕಾಲದ ಆಭರಣ. ಈ ಚಿನ್ನದ ನಿಧಿ ಸುಮಾರು 500ರಿಂದ 600 ವರ್ಷಗಳ ಹಿಂದಿನ ವಿಜಯನಗರ ಕಾಲದ ಅರಸರ ಅವಧಿಯ ಆಭರಣಗಳು ಇರಬಹುದು ಎಂದು ತಜ್ಞ ಡಾ. ಎಂ.ಎಸ್. ಕೃಷ್ಣಮೂರ್ತಿ ಅನುಮಾನ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ ಸುಮಾರು 13 ಅಡಿ ಆಳದವರೆಗೂ ಗುಂಡಿ ತೆಗೆದು ಉತ್ಖನನ ನಡೆಸಲಾಗಿತ್ತು. ಉತ್ಖನನ ಸಂದರ್ಭದಲ್ಲಿ ಶಿವಲಿಂಗ, ಪಾಣಿಪೀಠ, ನಾಗರ&zwnj; ಶಿಲೆಗಳು, ಬಿಲ್ಲೆ, ಮೂಳೆ ತುಣುಕುಗಳು, ಪಚ್ಚೆ ಕಲ್ಲು, ಹವಳ, ಕವಡೆ, ಮಡಿಕೆ ಚೂರು ಸೇರಿದಂತೆ ವಿಧ ರೀತಿಯ ವಿಗ್ರಹಗಳು ಸೇರಿದಂತೆ 50ಕ್ಕೂ ಅಧಿಕ ಪ್ರಾಚ್ಯಾವಶೇಷ ಪತ್ತೆಯಾಗಿದ್ದವು.&lt;/p&gt;&lt;img&gt;&lt;p&gt;ಇಂದು ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP - Standard Operating Procedure) ಮೂಲಕ ಗುಂಡಿ ಮುಚ್ಚುವ ಕಾರ್ಯವನ್ನು ನಡೆಸಲಾಗುತ್ತಿದೆ. ಕೆಳಭಾಗದಲ್ಲಿ ತಾಡಪತ್ರೆ, ಮರಳು, ಇಟ್ಟಿಗೆ ಇಟ್ಟು ಅವುಗಳ ಮೇಲೆ ಮಣ್ಣು ಹಾಕಲಾಗುತ್ತದೆ. ನಂತರ ಜೆಸಿಬಿ ಮೂಲಕ ಗುಂಡಿಗಳನ್ನು ಮುಚ್ಚಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿ ಹಳೇ ಹಂಡೆಯಲ್ಲಿ ಗೋಲ್ಡನ್ ಕವರ್ ಚಾಕ್ಲೆಟ್ ಹಾಕಿ 22 ಲಕ್ಷ ದೋಚಿದ್ದ ಮೌಲ್ವಿ ಅರೆಸ್ಟ್&lt;/strong&gt;&lt;/p&gt;&lt;img&gt;&lt;p&gt;ತಮಗೆ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಬಹುಮಾನದೊಂದಿಗೆ ನಿವೇಶನ ನೀಡಲಾಗಿತ್ತು. ಇತ್ತೀಚೆಗಷ್ಟೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿವೇಶನ ಪತ್ರ ಹಸ್ತಾಂತರಿಸಿದ್ದರು. ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ರಿತ್ತಿ ಕುಟುಂಬದ ಸದಸ್ಯರನ್ನು ಗೌರವಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿಗೂ ಮೊದಲು ನಡೆದಿತ್ತು ಅಚ್ಚರಿ, 17000 ವರ್ಷ ಹಿಂದಿನ ಅಮೂಲ್ಯ ಸಂಪತ್ತು ಪತ್ತೆ ಹಚ್ಚಿದ್ದ ನಾಯಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/gadag-lakkundi-excavation-which-had-captured-the-attention-of-the-entire-country-is-complete-mrq-5o5gpye"/>
        </item>
        <item>
            <title><![CDATA[ಕಪ್ಪತಗುಡ್ಡ ಗಣಿಗಾರಿಕೆಗೆ ತಡೆ ನೀಡಿ ಹೈಕೋರ್ಟ್ ಮಹತ್ವ ತೀರ್ಪು! ಏನಿದು ಪ್ರಕರಣ?]]></title>
            <link>https://kannada.asianetnews.com/karnataka-districts/high-court-stays-mining-in-kappatagudda-gadag-district-rav/articleshow-76dom0i</link>
            <guid isPermaLink="true">https://kannada.asianetnews.com/karnataka-districts/high-court-stays-mining-in-kappatagudda-gadag-district-rav/articleshow-76dom0i</guid>
            <pubDate>Wed, 11 Mar 2026 12:43:16 +0530</pubDate>
            <description><![CDATA[ಗದಗ ಜಿಲ್ಲೆಯ ಕಪ್ಪತಗುಡ್ಡ ಅಭಯಾರಣ್ಯದಿಂದ 55 ಚದರ ಕಿ.ಮೀ. ಅರಣ್ಯ ಪ್ರದೇಶವನ್ನು ಕೈಬಿಟ್ಟಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ಕಾನೂನುಬಾಹಿರ ಎಂದು ಘೋಷಿಸಿದೆ. ಈ ಪ್ರದೇಶವನ್ನು ಮರಳಿ ಅಭಯಾರಣ್ಯಕ್ಕೆ ಸೇರಿಸಲು ಆದೇಶಿಸುವ ಮೂಲಕ, ಗಣಿಗಾರಿಕೆಯ ಗಂಡಾಂತರವನ್ನು ತಪ್ಪಿಸಿ ಐತಿಹಾಸಿಕ ತೀರ್ಪು ನೀಡಿದೆ.]]></description>
            <media:content url="https://static.asianetnews.com/kp/100326/531710gdg10_3131.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.11): &amp;nbsp;&lt;/strong&gt;ಗದಗ ಜಿಲ್ಲೆ ವ್ಯಾಪ್ತಿಯ ಕಪ್ಪತಗುಡ್ಡದಲ್ಲಿ ಬಿಟ್ಟು ಹೋಗಿರುವ 55 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವನ್ನು ಪುನಃ ಅಭಯಾರಣ್ಯ ವ್ಯಾಪ್ತಿಗೆ ಸೇರಿಸಿ ಎಂದು ಹೈಕೋರ್ಟ್&zwnj; ಆದೇಶಿಸುವ ಮೂಲಕ ಗಣಿಗಾರಿಕೆಯ ಗಂಡಾಂತರ ತಪ್ಪಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಖಬ್ರು ಮತ್ತು ನ್ಯಾ. ಸಿ.ಎಂ.ಪೂಣಚ್ಚ ಅವರ ಪೀಠ, ಉತ್ತರ ಕರ್ನಾಟಕದ ಸಹ್ಯಾದ್ರಿ, ಆಯುರ್ವೇದ ಸಸ್ಯಕಾಶಿ ಎಂದೇ ಖ್ಯಾತಿಯಾಗಿರುವ ಕಪ್ಪತಗುಡ್ಡವನ್ನು ಗಣಿಗಾರಿಕೆಯ ಕಪಿಮುಷ್ಠಿಯಿಂದ ಮುಕ್ತಗೊಳಿಸುವಲ್ಲಿ ಐತಿಹಾಸಿಕ ತೀರ್ಪು ನೀಡಿದೆ.&lt;/p&gt;&lt;p&gt;ಘೋಷಣೆಯಾಗಿದ್ದ ಕಪ್ಪತ್ತಗುಡ್ಡ ವನ್ಯಜೀವಿ ಧಾಮ ವ್ಯಾಪ್ತಿಗೆ ಒಳಪಡುತ್ತಿದ್ದ 55 ಚ.ಕಿ.ಮೀ ಅರಣ್ಯವನ್ನು ಸರ್ಕಾರ ಪರೋಕ್ಷವಾಗಿ ಗಣಿಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಯಾರಣ್ಯ ಘೋಷಣಾ ಪ್ರದೇಶ ವ್ಯಾಪ್ತಿಯಿಂದ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಪರಿಸರ ಹೋರಾಟಗಾರರು ಅರ್ಜಿ ಸಲ್ಲಿಸಿದ್ದರು.&lt;/p&gt;&lt;h2&gt;ಸ್ಟೋನ್ ಕ್ರಶರ್ ಲಾಬಿ:&lt;/h2&gt;&lt;p&gt;ಹಿಂದೆ ಕಪ್ಪತ್ತಗುಡ್ಡ ವನ್ಯಧಾಮಕ್ಕೆ ಹೊಂದಿಕೊಂಡಿದ್ದ ಹಲವಾರು ಸ್ಟೋನ್ ಕ್ರಶರ್ ಗಳನ್ನು ಸುಪ್ರೀಂ ಕೋರ್ಟನ ಆದೇಶದಂತೆ ಇತ್ತೀಚೆಗಷ್ಟೇ ಬಂದ್&zwnj; ಮಾಡಲಾಗಿತ್ತು. ಪುನಃ ಅವುಗಳ ಆರಂಭಕ್ಕೆ ಅವಕಾಶ ನೀಡಬೇಕು ಎಂದು ಕ್ರಶರ್ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳು, ಅರಣ್ಯ ಭೂಮಿಯನ್ನು ಕಡಿತಗೊಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯಪಟ್ಟರು.&lt;/p&gt;&lt;p&gt;ಈ ಪ್ರಕರಣವನ್ನು ಸುಧೀರ್ಘವಾಗಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಯಾವುದೇ ವನ್ಯಧಾಮದಿಂದ ಭೂಮಿಯನ್ನು ಕೈಬಿಡುವ ಮೊದಲು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ಅದರ ಅಡಿಯಲ್ಲಿಯೇ ಎಲ್ಲವೂ ನಡೆಯಬೇಕು. ಆದರೆ ಕಪ್ಪತ್ತಗುಡ್ಡ ವಿಷಯದಲ್ಲಿ ನಿಯಮ ಗಾಳಿಗೆ ತೂರಿ ವಿಸ್ತೀರ್ಣ (55 ಚದರ ಕಿಲೋ ಮೀಟರ್) ಕಡಿತಗೊಳಿಸಿರುವುದು ಅಕ್ಷಮ್ಯ ಮತ್ತು ಕಾನೂನುಬಾಹಿರ. ತಕ್ಷಣವೇ ಒಟ್ಟು ಘೋಷಣೆಯಾಗಬೇಕಿದ್ದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಹೋಗಿರುವ 55 ಚದರ ಕಿಲೋ ಮೀಟರ್, ಅರಣ್ಯ ಪ್ರದೇಶವನ್ನು ಪುನಃ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವಂತೆ ಹೈಕೋರ್ಟನ ನ್ಯಾಯಮೂರ್ತಿ ವಿಭು ಖಬ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ಸೂಚಿಸಿದೆ.&lt;/p&gt;&lt;h3&gt;ನಿರಂತರ ಪ್ರಯತ್ನ:&lt;/h3&gt;&lt;p&gt;ಕಪ್ಪತಗುಡ್ಡದ ಹೊಟ್ಟೆಯಲ್ಲಿರುವ ಚಿನ್ನದ ಮೇಲೆ ಕಣ್ಣಿಟ್ಟಿದ್ದ ಖಾಸಗಿ ಕಂಪನಿಯೊಂದು ಕಳೆದ ಹಲವಾರು ವರ್ಷಗಳಿಂದ ಕಪ್ಪತ್ತಗುಡ್ಡದಲ್ಲಿರುವ ಬಂಗಾರದ ಅದಿರನ್ನು ಪಡೆಯಬೇಕು ಎಂದು ಹವಣಿಸುತ್ತಲೇ ಇದೆ. ಇದಕ್ಕಾಗಿ ಸಾಕಷ್ಟು ಕಾನೂನು ತೊಡಕುಗಳನ್ನು ಸೃಷ್ಟಿಸಿ ಹೋರಾಟಗಳನ್ನು ಹತ್ತಿಕ್ಕುತ್ತಲೇ ಬಂದಿದೆ. ಅದರೊಟ್ಟಿಗೆ ಆಳುವ ಸರ್ಕಾರಗಳ ಮೇಲೆ ವಿವಿಧ ರೀತಿಯ ಒತ್ತಡಗಳನ್ನು ಕಾಲಕಾಲಕ್ಕೆ ತರುತ್ತಲೇ ಇರುವುದನ್ನು ಸ್ಮರಿಸಬಹುದು.&lt;/p&gt;&lt;p&gt;ಸರ್ಕಾರ ತೆರೆಮರೆಯಲ್ಲಿ ಕಪ್ಪತ್ತಗುಡ್ಡ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಲು ಯತ್ನಿಸಿತ್ತು ಎನ್ನುವುದು ಈ ಹಿಂದಿನ ಸರ್ಕಾರದ ನಡೆಗಳನ್ನು ನೋಡಿದಾಗಲೇ ಸ್ಪಷ್ಟವಾಗುತ್ತದೆ. ನ್ಯಾಯಾಲಯ ಈ ಕುರಿತು ಸ್ಪಷ್ಟ ಸಂದೇಶ ನೀಡಿದ್ದು, ಕಪ್ಪತ್ತಗುಡ್ಡ ಉಳಿಯಲು ಸಾಧ್ಯವಾಗಲಿದೆ.&lt;/p&gt;&lt;p&gt;ರಾಜೂ ಖಾನಪ್ಪನವರ, ಸಾಮಾಜಿಕ ಹೋರಾಟಗಾರ&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/high-court-stays-mining-in-kappatagudda-gadag-district-rav/articleshow-76dom0i"/>
        </item>
        <item>
            <title><![CDATA[Gadag printing industry crisis ಮಧ್ಯಪ್ರಾಚ್ಯ ಯುದ್ಧಕ್ಕೆ ಮುದ್ರಣ ಕಾಶಿ ಗದಗ ತತ್ತರ]]></title>
            <link>https://kannada.asianetnews.com/karnataka-districts/printing-kashi-gadag-in-crisis-middle-east-war-hits-raw-material-supply-rav/articleshow-7k1671u</link>
            <guid isPermaLink="true">https://kannada.asianetnews.com/karnataka-districts/printing-kashi-gadag-in-crisis-middle-east-war-hits-raw-material-supply-rav/articleshow-7k1671u</guid>
            <pubDate>Sun, 05 Apr 2026 09:15:51 +0530</pubDate>
            <description><![CDATA[ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಕರ್ನಾಟಕದ ಮುದ್ರಣ ಕಾಶಿ ಗದಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಚ್ಚಾ ವಸ್ತುಗಳ ಬೆಲೆ ಶೇ. 25ರಷ್ಟು ಹೆಚ್ಚಾಗಿದ್ದು, ಜಿಎಸ್&zwnj;ಟಿ ತೆರಿಗೆಯ ಹೊರೆಯೂ ಸೇರಿ ಮುದ್ರಣ ಸಂಸ್ಥೆಗಳು ಬಾಗಿಲು ಮುಚ್ಚುವ ಆತಂಕದಲ್ಲಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kndvck17h9zc75rpkwy4bg9h,imgname----------------------70--1775360166951.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಗದಗ (ಏ.5):&lt;/strong&gt; ಕರ್ನಾಟಕದ ಮುದ್ರಣ ಕಾಶಿ ಗದಗ ಮುದ್ರಣ ಉದ್ಯಮಕ್ಕೆ ಈಗ ಜಾಗತಿಕ ಯುದ್ಧದ ಭೀತಿ ಮತ್ತು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷ ಗದಗಿನ ನೂರಾರು ಮುದ್ರಣ ಸಂಸ್ಥೆಗಳ ಬದುಕನ್ನು ಬೀದಿಗೆ ತಳ್ಳುವ ಆತಂಕ ಮೂಡಿಸಿದೆ.&lt;/p&gt;&lt;p&gt;ಮಧ್ಯಪ್ರಾಚ್ಯ ದೇಶಗಳಿಂದ ಆಮದಾಗುವ ಪೆಟ್ರೋಲಿಯಂ ಉಪ ಉತ್ಪನ್ನಗಳು ಮುದ್ರಣ ಉದ್ಯಮಕ್ಕೆ ಅತ್ಯಗತ್ಯ. ಆದರೆ, ಯುದ್ಧದ ಕಾರಣದಿಂದಾಗಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಲೆಗಳು ಗಗನಕ್ಕೇರಿವೆ.&lt;/p&gt;&lt;h2&gt;ಬೆಲೆ ಏರಿಕೆ:&lt;/h2&gt;&lt;p&gt;ಪೆಟ್ರೋಲಿಯಂ ಆಧಾರಿತ ಇಂಕ್ ಮತ್ತು ಪ್ಲೇಟ್&zwnj;ಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಕಳೆದ ಕೇವಲ ಎರಡು ತಿಂಗಳ ಅವಧಿಯಲ್ಲಿ ವಿವಿಧ ಕಚ್ಚಾ ವಸ್ತುಗಳ ಬೆಲೆ ಶೇ. 10ರಿಂದ ಶೇ. 25ರಷ್ಟು ಏರಿಕೆಯಾಗಿದೆ.&lt;/p&gt;&lt;h3&gt;​ಕೃತಕ ಅಭಾವದ ಆತಂಕ:&lt;/h3&gt;&lt;p&gt;ಯುದ್ಧದ ನೆಪವನ್ನಿಟ್ಟುಕೊಂಡು ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಸಂಶಯವನ್ನು ಮುದ್ರಕರು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸರ್ಕಾರಗಳು ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುದ್ರಣ ಕ್ಷೇತ್ರ ಸಂಪೂರ್ಣ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಲಿದೆ.&lt;/p&gt;&lt;p&gt;ಟ್ಯಾಕ್ಸ್ ಹೊಡೆತ:&lt;/p&gt;&lt;p&gt;ಈಗಾಗಲೇ ಜಿಎಸ್&zwnj;ಟಿ ಹೊರೆಯಿಂದ ನಲುಗಿದ್ದ ಉದ್ಯಮಕ್ಕೆ ಹೊಸ ತೆರಿಗೆ ನೀತಿಗಳು ಮತ್ತಷ್ಟು ಪೆಟ್ಟು ನೀಡಿವೆ. 2024ರಿಂದ ಜಾರಿಗೆ ಬರುವಂತೆ ಮುದ್ರಣ ಕಚ್ಚಾ ವಸ್ತುಗಳ ಮೇಲೆ ಸರ್ಕಾರ ಶೇ. 18ರಷ್ಟು ತೆರಿಗೆ ವಿಧಿಸಿದೆ. ​ತೆರಿಗೆಯಿಂದಾಗಿ ತತ್ತರಿಸಿದ್ದ ಮುದ್ರಕರಿಗೆ ಈಗ ಯುದ್ಧದಿಂದ ಉಂಟಾದ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.&lt;/p&gt;&lt;p&gt;ಅಂಕಿ-ಅಂಶಗಳು:&lt;/p&gt;&lt;p&gt;ಗದಗ ಜಿಲ್ಲೆಯಲ್ಲಿ ಮುದ್ರಣ ಉದ್ಯಮವನ್ನೇ ನಂಬಿಕೊಂಡಿರುವ ಸಾವಿರಾರು ಕಾರ್ಮಿಕರಿದ್ದಾರೆ. 30ಕ್ಕೂ ಹೆಚ್ಚು ಪ್ರಕಾಶಕರು, 100ಕ್ಕೂ ಹೆಚ್ಚು ಮುದ್ರಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಖ್ಯವಾಗಿ ಕರ್ನಾಟಕ, ಆಂದ್ರಪ್ರದೇಶ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ಬೇಕಾಗುವ ಕ್ಯಾಲೆಂಡರ್, ಪಂಚಾಂಗ, ಪಠ್ಯಪುಸ್ತಕ, ಧಾರ್ಮಿಕ ಗ್ರಂಥಗಳು, ಸಾಹಿತ್ಯಿಕ ಪುಸ್ತಕಗಳು ಪ್ರಮುಖವಾಗಿವೆ. ಇದರೊಟ್ಟಿಗೆ ಮಕ್ಕಳ ಆಟಿಕೆ ಚಾರ್ಟ್&zwnj;ಗಳು. ಅಂಕಲಿಪಿ, ಕಥೆ, ಕವನ ಸಂಕಲನಗಳ ಮುದ್ರಣದಲ್ಲಿ ಗದಗ ಜಿಲ್ಲೆ ಮೊದಲ ಸ್ಥಾನದಲ್ಲಿದೆ.&lt;/p&gt;&lt;p&gt;ರಾಜ್ಯಾದ್ಯಂತ ಪಂಚಾಂಗ ಮತ್ತು ಕ್ಯಾಲೆಂಡರ್&zwnj;ಗಳಿಗೆ ಗದಗ ಹೆಸರುವಾಸಿ. ಆದರೆ, ಪೇಪರ್ ಮತ್ತು ಇಂಕ್ ಬೆಲೆ ಏರಿಕೆಯಿಂದಾಗಿ ಮುದ್ರಣ ವೆಚ್ಚ ದುಪ್ಪಟ್ಟಾಗಿದೆ. ಮುಂಚಿತವಾಗಿ ಆರ್ಡರ್ ಪಡೆದ ಮುದ್ರಕರಿಗೆ ಈಗಿನ ಬೆಲೆಯಲ್ಲಿ ಮುದ್ರಣ ಮಾಡಿಕೊಡುವುದು ನಷ್ಟದ ಕೆಲಸವಾಗಿ ಪರಿಣಮಿಸಿದೆ.&lt;/p&gt;&lt;p&gt;&lt;strong&gt;ಚೇತನ ಖಟವಟೆ. ಎನ್&zwnj;.ಆರ್. ಪ್ರಿಂಟರ್ಸ್ ಮಾಲೀಕ, ಗದಗ&lt;/strong&gt;&lt;/p&gt;&lt;p&gt;ಸರ್ಕಾರ ತಕ್ಷಣವೇ ಮುದ್ರಕರ ಅಳಲನ್ನು ಕೇಳಬೇಕು. ಕಚ್ಚಾ ವಸ್ತುಗಳ ಮೇಲಿನ ತೆರಿಗೆ ಕಡಿಮೆ ಮಾಡಿದರೆ ಮಾತ್ರ ಈ ಉದ್ಯಮ ಉಳಿಯಲು ಸಾಧ್ಯ. ಇಲ್ಲದಿದ್ದರೆ ಮುದ್ರಣ ಕಾಶಿಯ ಈ ಪರಂಪರೆ ಇತಿಹಾಸ ಪುಟ ಸೇರಲಿದೆ.&lt;/p&gt;&lt;p&gt;&lt;strong&gt;ವಿವಿಧ ಸಂಸ್ಥೆಯ ಪ್ರಕಾಶಕರು&lt;/strong&gt;&lt;/p&gt;&lt;p&gt;ಬೆಲೆ ಏರಿಕೆ ವಿವರ&lt;/p&gt;&lt;p&gt;ಇಂಕ್&lt;/p&gt;&lt;ul&gt; &lt;li&gt;ಹಿಂದಿನ ರೇಟ್ : ಕೆಜಿಗೆ ₹440&lt;/li&gt; &lt;li&gt;ಇಂದಿನ ರೇಟ್ : ಕೆಜಿಗೆ ₹470&lt;/li&gt; &lt;li&gt;ಹೆಚ್ಚಳ : 9/10 %&lt;/li&gt; &lt;li&gt;ಅಲ್ಯೂಮಿನಿಯಂ ಪ್ಲೇಟ್&lt;/li&gt;&lt;/ul&gt;&lt;p&gt;ಹಿಂದಿನ ರೇಟ್ : (ಪ್ಲೇಟ್&zwnj;ಗೆ ) ₹170&lt;/p&gt;&lt;p&gt;ಇಂದಿನ ರೇಟ್ : ₹195&lt;/p&gt;&lt;p&gt;ಹೆಚ್ಚಳ: 15 %&lt;/p&gt;&lt;p&gt;ಲ್ಯಾಮಿನೇಷನ್ ಫಿಲಂ&lt;/p&gt;&lt;p&gt;ಹಿಂದಿನ ರೇಟ್ : ಕೆಜಿಗೆ ₹190&lt;/p&gt;&lt;p&gt;ಇಂದಿನ ರೇಟ್ : ಕೆಜಿಗೆ ₹240&lt;/p&gt;&lt;p&gt;ಹೆಚ್ಚಳ : 25 %&lt;/p&gt;&lt;p&gt;ಲ್ಯಾಮಿನೇಷನ್ ಅಂಟು&lt;/p&gt;&lt;p&gt;ಹಿಂದಿನ ರೇಟ್ : ಕೆಜಿಗೆ ₹130&lt;/p&gt;&lt;p&gt;ಇಂದಿನ ರೇಟ್ : ಕೆಜಿಗೆ ₹150&lt;/p&gt;&lt;p&gt;ಹೆಚ್ಚಳ: 15%&lt;/p&gt;&lt;p&gt;ಆರ್ಟ್ ಪೇಪರ್ (ಪ್ರಿಂಟ್&zwnj;ಗೆ ಬಳಸುವ)&lt;/p&gt;&lt;p&gt;ಹಿಂದಿನ ರೇಟ್ : ಕೆಜಿಗೆ ₹72&lt;/p&gt;&lt;p&gt;ಇಂದಿನ ರೇಟ್ : ಕೆಜಿಗೆ ₹80&lt;/p&gt;&lt;p&gt;ಹೆಚ್ಚಳ: 10%&lt;/p&gt;&lt;p&gt;ಮಷಿನ್ ತೊಳೆಯುವ ಕೆಮಿಕಲ್&lt;/p&gt;&lt;p&gt;ಹಿಂದಿ&zwnj;ನ ರೇಟ್ : ಲೀಟರ್&zwnj;ಗೆ ₹160&lt;/p&gt;&lt;p&gt;ಇಂದಿನ ರೇಟ್ : ಲೀಟರ್&zwnj;ಗೆ 200&lt;/p&gt;&lt;p&gt;ಹೆಚ್ಚಳ: 25%&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/printing-kashi-gadag-in-crisis-middle-east-war-hits-raw-material-supply-rav/articleshow-7k1671u"/>
        </item>
        <item>
            <title><![CDATA[ಅಪ್ಪನಿಗೆ ಅನಾರೋಗ್ಯ ಮನೆಯಲ್ಲಿ ಬಡತನ SSLC ಪರೀಕ್ಷೆ ಬಿಟ್ಟು ಕೂಲಿಗೆ ಹೋದ ಬಾಲಕಿ: ಆಮೇಲಾಗಿದ್ದೇನು?]]></title>
            <link>https://kannada.asianetnews.com/state/gadag-student-skipped-sslc-exam-and-went-to-work-as-labourer-what-happened-next/articleshow-bxdgrtm</link>
            <guid isPermaLink="true">https://kannada.asianetnews.com/state/gadag-student-skipped-sslc-exam-and-went-to-work-as-labourer-what-happened-next/articleshow-bxdgrtm</guid>
            <pubDate>Mon, 23 Mar 2026 23:53:00 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯಲ್ಲಿ, ಬಡತನ ಮತ್ತು ತಂದೆಯ ಅನಾರೋಗ್ಯದ ಕಾರಣ: ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಮತ್ತೆ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆಸಿದಂತಹ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಗ್ರಾಮದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmdyq3xs4ydcv9pty6bme5vp,imgname-gadag-student-skipped-sslc-exam-1774289915833.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಪರೀಕ್ಷೆ ಬಿಟ್ಟು ಕೂಲಿಗೆ ಹೋದ ವಿದ್ಯಾರ್ಥಿನಿ&lt;/strong&gt;&lt;/h2&gt;&lt;p&gt;ಗದಗ: ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಮತ್ತೆ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ಬರೆಸಿದಂತಹ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಗ್ರಾಮದಲ್ಲಿ ನಡೆದಿದೆ. ಬಾಲಕಿಯ ತಂದೆ ಅನಾರೋಗ್ಯ ಪೀಡಿತರಾಗಿದ್ದರು. ಮನೆಯಲ್ಲಿ ಬಡತನವೂ ತುಂಬಿ ತುಳುಕಾಡುತ್ತಿತ್ತು. ಈ ಹಿನ್ನೆಲೆ ಬಾಲಕಿ ಪರೀಕ್ಷೆ ತೊರೆದು ಕೂಲಿ ಕೆಲಸಕ್ಕೆಂದು ದ್ರಾಕ್ಷಿ ತೋಟದಲ್ಲಿ ಕೆಲಸಕ್ಕೆ ಹೋಗಿದ್ದಳು. ಆದರೆ ಈ ವಿಚಾರ ತಿಳಿದ ಸರ್ಕಾರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಆಕೆಯನ್ನು ವಾಪಸ್ ಕರೆಸಿ ಆಕೆಗೆ ಮರು ಪರೀಕ್ಷೆ ಮಾಡಿದ್ದಾರೆ.&lt;/p&gt;&lt;h3&gt;&lt;strong&gt;ಎಸ್&zwnj;ಎಸ್&zwnj;ಎಲ್&zwnj;ಸಿ ವಿಜ್ಞಾನ ಪರೀಕ್ಷೆಯನ್ನು ಬಿಟ್ಟು ಬಾಲಕಿ ಕೂಲಿ ಕೆಲಸಕ್ಕೆ&lt;/strong&gt;&lt;/h3&gt;&lt;p&gt;ಎಸ್&zwnj;ಎಸ್&zwnj;ಎಲ್&zwnj;ಸಿ ವಿಜ್ಞಾನ ಪರೀಕ್ಷೆಯನ್ನು ಬಿಟ್ಟು ಬಾಲಕಿ ಕೂಲಿ ಕೆಲಸಕ್ಕೆ ಹೋಗಿದ್ದಳು. ಬಾಲಕಿಯನ್ನುಪಲ್ಲವಿ ಹಳ್ಳಿಕೇರಿ ಎಂದು ಗುರುತಿಸಲಾಗಿದ್ದು, ಈಕೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಿದ್ಯಾರ್ಥಿನಿಯಾಗಿದ್ದು, ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದಳು.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ಜಮೀನಿನಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ: ಕಲ್ಲು ತೂರಾಟ..&lt;/p&gt;&lt;p&gt;ಆದರೆ ಮನೆಯಲ್ಲಿದ್ದ ದುಸ್ಥಿತಿ ನೆನೆದು ಆಕೆ ಪರೀಕ್ಷೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗಿದ್ದಳು. ಈ ವಿಚಾರ ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರ ಗಮನಕ್ಕೆ ಬರುತ್ತಿದ್ದಂತೆ ಹುಡುಗಿಯನ್ನು ವಾಪಸ್ ಕರೆಸಿದ ಅವರು ಮುಂಡರಗಿ ಪಟ್ಟಣದ ವಿಜಿ ಲಿಂಬಿಕಾಯಿ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಆಕೆಗೆ ಪರೀಕ್ಷೆ ಬರೆಸಿದ್ದಾರೆ. ವಿದ್ಯಾರ್ಥಿನಿ ಮನವೊಲಿಸಿ ವಿಜ್ಞಾನ ಪರೀಕ್ಷೆ ಬರೆಸಿದ ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರ ಕಾರ್ಯಕ್ಕೆ ಈಗ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುತ್ತು ಅನ್ನಕ್ಕಾಗಿ ಸುರಿಯುವ ಮಳೆ ಲೆಕ್ಕಿಸದೇ ಚಳಿಯಲ್ಲೇ ನಡುಗುತ್ತಾ ಸಾಲುಗಟ್ಟಿ ನಿಂತ ಪುಟ್ಟ ಪುಟ್ಟ ಮಕ್ಕಳು&lt;/strong&gt;&lt;/p&gt;]]></content:encoded>
            <category>gadag</category>
            <dc:creator>Anusha Kb</dc:creator>
            <atom:link href="https://kannada.asianetnews.com/state/gadag-student-skipped-sslc-exam-and-went-to-work-as-labourer-what-happened-next/articleshow-bxdgrtm"/>
        </item>
        <item>
            <title><![CDATA[2 ಹಳ್ಳಿಗೆ ಇರೋದು ಒಂದೇ ಟ್ಯಾಂಕ್, 15 ದಿನಕೊಮ್ಮೆ ನೀರು; ಬತ್ತಿದ ನಲ್ಲಿ, ಬರಿದಾದ ಭರವಸೆ]]></title>
            <link>https://kannada.asianetnews.com/karnataka-districts/gadag-district-banahatti-and-muganur-villages-in-nargund-taluk-will-get-water-once-in-15-days-mrq/articleshow-dsu8t8s</link>
            <guid isPermaLink="true">https://kannada.asianetnews.com/karnataka-districts/gadag-district-banahatti-and-muganur-villages-in-nargund-taluk-will-get-water-once-in-15-days-mrq/articleshow-dsu8t8s</guid>
            <pubDate>Thu, 05 Mar 2026 09:33:50 +0530</pubDate>
            <description><![CDATA[&lt;p&gt;ನರಗುಂದ ತಾಲೂಕಿನ ಮೂಗನೂರು ಗ್ರಾಮಕ್ಕೆ 15 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬನಹಟ್ಟಿ ಮತ್ತು ಮೂಗನೂರು ಗ್ರಾಮಗಳಿಗೆ ಒಂದೇ ನೀರಿನ ಟ್ಯಾಂಕ್, ಪೈಪ್&zwnj;ಲೈನ್&zwnj; ಹಾನಿ ಮತ್ತು ಸಾಂಪ್ರದಾಯಿಕ ಕೆರೆಗಳ ನಿರ್ಲಕ್ಷ್ಯದಿಂದಾಗಿ ಈ ಸಮಸ್ಯೆ ಉಲ್ಬಣಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjy2c2tbkpzqef37zyjm1pcg,imgname-naragund-1772683135819.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಜಿ. ತೆಗ್ಗಿನಮನಿ&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ನರಗುಂದ ತಾಲೂಕಿನ ಬಹುತೇಕ ಕಡೆ ಸದ್ಯ ನೀರಿನ ಸಮಸ್ಯೆ ಅಷ್ಟಾಗಿ ಕಂಡುಬಂದಿಲ್ಲ. ಆದರೆ ಕೆಲವು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ತಾಲೂಕಿನ ಮೂಗನೂರು ಗ್ರಾಮಕ್ಕೆ 15 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುವಂತಾಗಿದೆ.&lt;/p&gt;&lt;p&gt;ತಾಲೂಕಿನ ಬನಹಟ್ಟಿ ಗ್ರಾಪಂ ವ್ಯಾಪ್ತಿಯ ಬನಹಟ್ಟಿ ಮತ್ತು ಮೂಗನೂರು ಗ್ರಾಮಗಳಿಗೆ ನೀರು ಸಂಗ್ರಹ ಮಾಡಲು ಒಂದೇ ಟ್ಯಾಂಕ್ ಇದೆ. ಇದರಿಂದ ಜಲಾಶಯದಿಂದ ಬರುವ ನೀರನ್ನು ಸಂಗ್ರಹಿಸಿಕೊಂಡು ಈ ಎರಡು ಗ್ರಾಮಗಳಿಗೆ ನೀರು ಪೂರೈಕೆ ಮಾಡುವುದು ಗ್ರಾಪಂ ಸಿಬ್ಬಂದಿಗೆ ದೊಡ್ಡ ಸವಾಲಾಗಿದೆ.&lt;/p&gt;&lt;p&gt;ಮೂಗನೂರು ಗ್ರಾಮಕ್ಕೆ 1 ತಿಂಗಳಲ್ಲಿ 2 ಬಾರಿ ಕುಡಿಯುವ ನೀರು ಪೂರೈಕೆ ಮಾಡುವುದರಿಂದ ಗ್ರಾಮಸ್ಥರ ಸಮಸ್ಯೆ ಹೇಳತೀರದಾಗಿದೆ. ಅದೇ ರೀತಿ ಬನಹಟ್ಟಿ ಗ್ರಾಮಕ್ಕೆ ವಾರಕ್ಕೊಂದು ಬಾರಿ ನಲ್ಲಿಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ತಾಲೂಕಿನಲ್ಲಿ ಈ ಎರಡು ಗ್ರಾಮಗಳಲ್ಲೇ ನೀರಿನ ಸಮಸ್ಯೆ ಅಧಿಕವಾಗಿದೆ.&lt;/p&gt;&lt;h2&gt;&lt;strong&gt;ಜಲಾಶಯದಿಂದ ನೀರು ಪೂರೈಕೆ&lt;/strong&gt;&lt;/h2&gt;&lt;p&gt;ತಾಲೂಕಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಲಪ್ರಭಾ ಜಲಾಶಯದಿಂದ ಪೈಪಲೈನ ಮೂಲಕ ನೀರು ತಂದು ಕಳೆದು ಹಲವು ವರ್ಷಗಳಿಂದ ನೀರು ಪೂರೈಕೆಯನ್ನು ಗ್ರಾಮೀಣ ಭಾಗಗಳಿಗೆ ಮಾಡಲಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಪೈಪಲೈನ ಸರಿಯಾಗಿ ಆಗದ್ದರಿಂದ ಪ್ರತಿ ಮನೆಗಳಿಗೆ ನೀರು ಬಾರದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಪಾಳು ಬಿದ್ದ ಕೆರೆಗಳು&lt;/strong&gt;&lt;/h3&gt;&lt;p&gt;ತಾಲೂಕಿನಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಕೆರೆಗಳಿದ್ದವು. ಆದರೆ ತಾಲೂಕಿನಲ್ಲಿ ಜೆಜೆಎಂ ಮೂಲಕ ಜಲಾಶಯದಿಂದ ನೀರು ಪೂರೈಕೆ ಪ್ರಾರಂಭವಾದ ನಂತರ ಈ ಎಲ್ಲ ಕೆರೆಗಳು ಪಾಳು ಬಿದ್ದು ಜಾಲಿ ಕಂಟಿಗಳು ಬೆಳೆದು ವಿಷಜಂತುಗಳು ಓಡಾಡುವ ಪ್ರದೇಶವಾಗಿವೆ. ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಕೆರೆಯಲ್ಲಿನ ಜಾಲಿ ಕಂಟಿಗಳನ್ನು ಸ್ವಚ್ಛ ಮಾಡಿಸಿ ಕೆರೆಗೆ ನೀರು ತುಂಬಿಸಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂಬುದು ಸಾರ್ವಜನಿಕರ ಅಳಲು.&lt;/p&gt;&lt;h3&gt;&lt;strong&gt;ಪ್ರತಿವರ್ಷ ಪೈಪಲೈನಗೆ ಹಾನಿ&lt;/strong&gt;&lt;/h3&gt;&lt;p&gt;ಮಲಪ್ರಭಾ ಜಲಾಶಯದಿಂದ ಪೈಪಲೈನ ಮೂಲಕ ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಪೈಪಗಳು ರೈತರ ಜಮೀನುಗಳ ಬದಿ ಹಾಕಲಾಗಿದೆ. ಹಾಗಾಗಿ ಹಲವೆಡೆ ಬೇಸಿಗೆ ವೇಳೆ ರೈತರು ಪೈಪಗಳನ್ನು ಒಡೆದು ಜಮೀನುಗಳಿಗೆ ನೀರು ಹಾಯಿಸಿಕೊಳ್ಳುತ್ತಾರೆ. ಇದರಿಂದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.&lt;/p&gt;&lt;h3&gt;&lt;strong&gt;ಕೆಟ್ಟು ನಿಂತ ಶುದ್ಧ ಘಟಕ&lt;/strong&gt;&lt;/h3&gt;&lt;p&gt;ಸರ್ಕಾರ ಲಕ್ಷಾಂತರ ರು. ಹಣ ಖರ್ಚು ಮಾಡಿ ಪ್ರತಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಸ್ಥಾಪಿಸಿದೆ. ಆದರೆ ಜೆಜೆಎಂ ಯೋಜನೆ ಪ್ರಾರಂಭವಾದ ನಂತರ ಈ ಎಲ್ಲ ಶುದ್ಧ ನೀರಿನ ಘಟಕಗಳು ತುಕ್ಕು ಹಿಡಿದಿವೆ.&lt;/p&gt;&lt;p&gt;ತಾಲೂಕಿನ ಹದಲಿ, ಮುದ್ಗಣಿಕಿ, ಗಂಗಾಪುರ, ಖಾನಾಪುರ, ರಡ್ಡೇರನಾಗನೂರ, ಭೈರನಹಟ್ಟಿ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ಪ್ರತಿದಿನ ಸರಿಯಾಗಿ ನಲ್ಲಿಗಳಲ್ಲಿ ನೀರು ಬರುವುದಿಲ್ಲ. 6ರಿಂದ 10 ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಕೇಳಿದರೆ ಪೈಪ್ ಒಡೆದಿದೆ ಅಥವಾ ವಿದ್ಯುತ್ ಸಮಸ್ಯೆಯಿಂದ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲವೆಂದು ಗ್ರಾಪಂನವರು ಹೇಳುತ್ತಾರೆಂದು ಹದಲಿ ಗ್ರಾಮಸ್ಥ ಗುರಯ್ಯ ಶಿವಯ್ಯ ಭೂಸನೂರಮಠ ಆರೋಪಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗದಗ: ಅರ್ಧಕ್ಕೆ ನಿಂತ ಗ್ರಾಮದ ದೇಗುಲ ನಿರ್ಮಾಣಕ್ಕೆ ₹2.50 ಲಕ್ಷ ನೀಡಿದ 850 &lsquo;ಗೃಹಲಕ್ಷ್ಮೀ&rsquo;ಯರು&lt;/strong&gt;&lt;/p&gt;&lt;h3&gt;&lt;strong&gt;ತೊಂದರೆಯಾಗದಂತೆ ಕ್ರಮ&lt;/strong&gt;&lt;/h3&gt;&lt;p&gt;ಸದ್ಯ ನರಗುಂದ ತಾಲೂಕಿನ ಗ್ರಾಮಗಳಿಗೆ ನೀರು ಪೂರೈಕೆ ಸರಾಗವಾಗಿ ನಡೆದಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂಜಯಕುಮಾರ ತಿಳಿಸಿದರು.&lt;/p&gt;&lt;h3&gt;&lt;strong&gt;ನೀರು ಪೂರೈಕೆಯಲ್ಲಿ ತೊಂದರೆ&lt;/strong&gt;&lt;/h3&gt;&lt;p&gt;ಬನಹಟ್ಟಿ- ಮೂಗನೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಒಂದೇ ನೀರು ಸಂಗ್ರಹ ಟ್ಯಾಂಕ್ ಇದೆ. ಅಲ್ಲದೇ ಆಗಾಗ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದರಿಂದ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ ಎಂದು ಪ್ರಭಾರಿ ಬನಹಟ್ಟಿಯ ಪಿಡಿಒ ಮಂಜುನಾಥ ಗಣಿ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; Gadag: ರಸ್ತೆ ಬದಿಯ ಎಗ್ ರೈಸ್ ಅಂಗಡಿಗಳ ಮೇಲೆ ದಾಳಿ; ಬಂದ್ ಮಾಡುವ ಎಚ್ಚರಿಕೆ ನೀಡಿದ ಅಧಿಕಾರಿಗಳು&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-district-banahatti-and-muganur-villages-in-nargund-taluk-will-get-water-once-in-15-days-mrq/articleshow-dsu8t8s"/>
        </item>
        <item>
            <title><![CDATA[ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!]]></title>
            <link>https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</link>
            <guid isPermaLink="true">https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu</guid>
            <pubDate>Thu, 05 Mar 2026 09:50:36 +0530</pubDate>
            <description><![CDATA[&lt;p&gt;ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಿರಿಯ ಇಂಜಿನಿಯರ್&zwnj;ಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjy381nnqke8cyy0q71zy4e9,imgname-karnataka-lokayukta-raid-1772684052148.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಮಾ.05): ರಾ&lt;/strong&gt;ಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್&zwnj;ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಜಾಲಾಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಹಾಸನದಲ್ಲಿ ಜೀಪ್ ಏರಿ ಒಳಹೋದ ಅಧಿಕಾರಿಗಳು!&lt;/strong&gt;&lt;/h2&gt;&lt;p&gt;ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ ನಗರದ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್&zwnj;ಪಿ ಸುರೇಶ್ ನೇತೃತ್ವದ ತಂಡ ದಾಳಿ ಮಾಡಿದಾಗ, ಅಧಿಕಾರಿ ಬಾಗಿಲು ತೆಗೆಯಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಚಾಣಾಕ್ಷತನ ಮೆರೆದರು. ಠಾಣೆಯ ಜೀಪ್ ಅನ್ನು ಮನೆಯ ಗೋಡೆಗೆ ಅಂಟಿಸಿ ನಿಲ್ಲಿಸಿ, ಅದರ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿ ಸತ್ಯನಾರಾಯಣ ಅವರಿಗೆ ಶಾಕ್ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ವಿಜಯಪುರದಲ್ಲಿ ಶಾಲೆಯ ಮೇಲೂ ದಾಳಿ!&lt;/strong&gt;&lt;/h2&gt;&lt;p&gt;ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆ.ಬಿ.ಜೆ.ಎನ್.ಎಲ್ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ (ಗೊಡಬಂಡಿ) ಅವರ ಮೇಲೆ ನಡೆದ ದಾಳಿ ಕೂಡ ಗಮನಾರ್ಹವಾಗಿದೆ. ಪ್ರಕಾಶ್ ಅವರ ಇಂಡಿ ಕಚೇರಿ, ನಿವಾಸದ ಜೊತೆಗೆ ಬೆಂಗಳೂರಿನ ಮಹದೇವಪುರದಲ್ಲಿರುವ ಮನೆ ಹಾಗೂ ಬೀದರ್&zwnj;ನ ಹುಮನಾಬಾದ್&zwnj;ನಲ್ಲಿರುವ ಮನೆಯ ಮೇಲೆಯೂ ದಾಳಿ ನಡೆದಿದೆ. ವಿಶೇಷವೆಂದರೆ, ಇವರ ಪತ್ನಿಯ ಹೆಸರಿನಲ್ಲಿರುವ ಶಾಲೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಚೀಫ್ ಇಂಜಿನಿಯರ್ ಬೆವರಿಳಿಸಿದ ಲೋಕಾ&lt;/strong&gt;&lt;/h2&gt;&lt;p&gt;ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (KRDCL) ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ್ ಅವರ ಮೇಲೆ ಬೆಂಗಳೂರು, ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇವರ ಸಹೋದರ ಭೀಮಸಿಂಗ್ ನಾಯಕ್ ಬಾಗಲಕೋಟೆಯಲ್ಲಿ ಎಎಸ್&zwnj;ಐ (ASI) ಆಗಿ ಕೆಲಸ ಮಾಡುತ್ತಿದ್ದು, ಅವರ ಮನೆಯ ಮೇಲೆಯೂ ದಾಳಿ ಮಾಡಲಾಗಿದೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿರುವ ವಸಂತ ನಾಯಕ್ ಅವರ ಮನೆಯಲ್ಲಿ ಬೆಲೆಬಾಳುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.&lt;/p&gt;&lt;h2&gt;&lt;strong&gt;ರಾಜ್ಯದ ವಿವಿಧೆಡೆ ದಾಳಿಗೆ ಒಳಗಾದ ಅಧಿಕಾರಿಗಳ ಪಟ್ಟಿ:&lt;/strong&gt;&lt;/h2&gt;&lt;p&gt;&lt;strong&gt;ಯಾದಗಿರಿ: &lt;/strong&gt;ವೀರೇಶ್ ಹಿರೇಮಠ (ಜೆಸ್ಕಾಂ ಉಪ ವಿದ್ಯುತ್ ಪರಿವೀಕ್ಷಕ) - ಯಾದಗಿರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಮಂಡ್ಯ: &lt;/strong&gt;ಎಸ್. ಸತೀಶ್ (ಎಎಇ, ಪಿಡಬ್ಲ್ಯೂಡಿ) - ಬಂದಿಗೌಡ ಬಡಾವಣೆಯ ಮನೆ ಸೇರಿದಂತೆ 4 ಕಡೆ ದಾಳಿ.&lt;/p&gt;&lt;p&gt;&lt;strong&gt;ಗದಗ: &lt;/strong&gt;ಎಂ.ಕೆ. ಸುರಕೋಡ್ (ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ) - ಗದಗ ನಗರದ ವಿಶ್ವೇಶ್ವರ ಬಡಾವಣೆ ಸೇರಿ 6 ಕಡೆ ರೇಡ್.&lt;/p&gt;&lt;p&gt;&lt;strong&gt;ಮೈಸೂರು: &lt;/strong&gt;ಆಸಿಫ್ ಇಕ್ಬಾಲ್ ಹುಸೇನ್ (ಎಎಇ, ನಗರ ನೀರು ಸರಬರಾಜು ಮಂಡಳಿ) - ಶಿವಾಜಿ ರಸ್ತೆ ನಿವಾಸ ಮತ್ತು ಸರಸ್ವತಿಪುರಂ ಕಚೇರಿ ಮೇಲೆ ದಾಳಿ.&lt;/p&gt;&lt;p&gt;&lt;strong&gt;ಬೆಂಗಳೂರು: &lt;/strong&gt;ಆರ್. ಶಶಿಧರ್ (ಸಿಇಒ, ರೈತ ಸೇವಾ ಸಹಕಾರ ಸಂಘ, ಯಲಹಂಕ) ಮತ್ತು ಹೆಚ್.ಸಿ. ಇಂದ್ರೇಶ್ (ಸಹಾಯಕ ಪ್ರಾಧ್ಯಾಪಕ, ಪಶುವೈದ್ಯಕೀಯ ಕಾಲೇಜು, ಹೆಬ್ಬಾಳ).&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-lokayukta-massive-statewide-raids-senior-officials-corruption-hunt-2026-sat/articleshow-gg0d0eu"/>
        </item>
        <item>
            <title><![CDATA[ರಾಜ್ಯದಲ್ಲಿ ಬೇಸಿಗೆ ಮಳೆ ಅವಾಂತರ: ಹೊತ್ತಿ ಉರಿದ ತೆಂಗಿನ ಮರ, ವ್ಯಕ್ತಿ ಸಿಡಿಲಿಗೆ ಬಲಿ, ಆಲಿಕಲ್ಲು ಮಳೆಗೆ ಭಾರಿ ಬೆಳೆ ಹಾನಿ]]></title>
            <link>https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680</link>
            <guid isPermaLink="true">https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680</guid>
            <pubDate>Wed, 18 Mar 2026 10:23:18 +0530</pubDate>
            <description><![CDATA[&lt;p&gt;ಕರ್ನಾಟಕದ &amp;nbsp;ಹಲವೆಡೆ ಗುಡುಗು, ಸಿಡಿಲು ಸಹಿತ ಸುರಿದ ಭಾರೀ ಮಳೆಯು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗದಗದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟರೆ, ರಾಯಚೂರಿನಲ್ಲಿ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಚಾಮರಾಜನಗರದಲ್ಲಿ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkzh3db8vzk9hdyt39nf4dwa,imgname-coconut-tree-fire-after-lightning-strike-1773805876584.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ &amp;nbsp;ಹಲವೆಡೆ ಗುಡುಗು, ಸಿಡಿಲು ಸಹಿತ ಸುರಿದ ಭಾರೀ ಮಳೆಯು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗದಗದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟರೆ, ರಾಯಚೂರಿನಲ್ಲಿ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಚಾಮರಾಜನಗರದಲ್ಲಿ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;&lt;img&gt;&lt;p&gt;ರಾಯಚೂರು: ನಿನ್ನೆ ಗುಡುಗು ಮಿಂಚು ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಗೆ ರಾಜ್ಯದ ಹಲವು ಕಡೆಗಳಲ್ಲಿ ಕೆಲವೊಂದು ಅನಾಹುತಗಳು ಸಂಭವಿಸಿದೆ. ರಾಯಚೂರು ಜಿಲ್ಲೆ ಅರಕೇರಾ ತಾ. ಹಾಳಜಾಡಲದಿನ್ನಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ತೆಂಗಿನ ಮರ ಇದಾಗಿದೆ. ಸಿಡಿಲು ಬಡಿದ ಪರಿಣಾಮ ತೆಂಗಿನಮರ ಸಂಪೂರ್ಣ ಸುಟ್ಟು ಹೋಗಿದ್ದು, ಮರ ಹೊತ್ತಿ ಉರಿಯುತ್ತಿರುವ ದೃಶ್ಯ ಈಗ ವೈರಲ್ ಆಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು&lt;/strong&gt;&lt;/p&gt;&lt;img&gt;&lt;p&gt;ಚಾಮರಾಜನಗರ: ನಿನ್ನೆ ಸುರಿದ ಆಲಿಕಲ್ಲು ಮಳೆ ಚಾಮರಾಜನಗರದಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದು, ಬೆಳೆದ ಬೆಳೆ ಕೈಗೆ ಸಿಗದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದ್ದು, ಮೆಣಸಿನಕಾಯಿ,ಟೊಮ್ಯಾಟೊ, ಕಲ್ಲಂಗಡಿ, ಬಾಳೆ ಸೇರಿ ಹಲವು ಬೆಳೆಗೆ ಹಾನಿಯಾಗಿದೆ. ಚಾಮರಾಜನಗರ ಗ್ರಾಮಾಂತರ ಪ್ರದೇಶದಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಚಾಮರಾಜನಗರ ತಾಲೂಕಿನ ಉತ್ತುವಳ್ಳಿ,ಕಾಡಳ್ಳಿ,ಸಂತೇಮರಹಳ್ಳಿ, ಬಸವಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೌಟುಂಬಿಕ ಕಲಹ ಎರಡು ಮಕ್ಕಳಾದ ಬಳಿಕ ಸನ್ಯಾಸಿಯಾದ ಪತಿಗೆ ಬೀದಿಯಲ್ಲೇ ಥಳಿಸಿದ ಮಹಿಳೆ: ವೀಡಿಯೋ&lt;/strong&gt;&lt;/p&gt;&lt;img&gt;&lt;p&gt;ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಹಾಗು ಜಿಲ್ಲೆಯ ಗಡಿಭಾಗದ ತಾಳವಾಡಿಯಲ್ಲಿ ಕಂಡೂ ಕೇಳರಿಯದ ರೀತಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ಈ ಗ್ರಾಮಗಳ ಬೀದಿಬೀದಿಗಳಲ್ಲಿ ಹಾಗು ಜಮೀನು, ತೋಟಗಳಲ್ಲಿ ಆಲಿಕಲ್ಲು ರಾಶಿರಾಶಿಯಾಗಿ ಬಿದ್ದಿದ್ದು ಗ್ರಾಮಸ್ಥರು ಆಶ್ಚರ್ಯ ಚಿಕಿತರಾಗಿದ್ದಾರೆ..&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ರಾಜ್ಯದಲ್ಲಿ ಬೇಸಿಗೆ ಮಳೆಗೆ ಮತ್ತೊಂದು ಬಲಿ: ಮನೆ ಗೋಡೆ ಕುಸಿದು ಪತ್ನಿ ಸಾವು, ಪತಿ ಜಸ್ಟ್ ಮಿಸ್&lt;/p&gt;&lt;img&gt;&lt;p&gt;ಬೀದರ್: ಗಡಿ ಜಿಲ್ಲೆ ಬೀದರ್&zwnj;ನಲ್ಲಿಯೂ ಆಕಾಲಿಕ ಮಳೆಗೆ ಜನ ಹೈರಾಣಾಗಿದ್ದಾರೆ.ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸತತ ಎರಡು ಗಂಟೆ ಕಾಲ ಆಲಿಕಲ್ಲು ಮಳೆ ಸುರಿದಿದೆ. ಕಳೆದ ಮೂರು ದಿನಗಳಿಂದ ಇಲ್ಲಿ ರಾತ್ರಿ ನಿರಂತರ ಮಳೆಯಾಗಿದೆ.ಬೀದರ್ ಜಿಲ್ಲೆಯ ಹುಮನಾಬಾದ್&zwnj;, ಔರಾದ್, ಬಸವಕಲ್ಯಾಣ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಚಿಕ್ಕಮಗಳೂರು : 50 ಅಡಿ ಆಳದ ಕಂದಕಕ್ಕೆ ಬಿದ್ದ &zwnj;ಕಾರು: ಅನುಮಾನ ಹುಟ್ಟಿಸಿದ ಅಪಘಾತ ಪ್ರಕರಣ&lt;/p&gt;&lt;img&gt;&lt;p&gt;ಗದಗ: ಗದಗ ಜಿಲ್ಲೆ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ನಿಂಗಪ್ಪ ಅಮಾತ್ಯ (58) ಮೃತಪಟ್ಟಿದ್ದಾರೆ. ಬೆಣ್ಣೆಹಳ್ಳ ಸಮೀಪ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ಅವರು ಕೆಲಸ ಮುಗಿಸಿ ವಾಪಾಸ್ ಬರುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಾಗೆಯೇ ಗದಗ ಜಿಲ್ಲೆಯ ರೋಣ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ರೈತರ ಕೈಗೆ ಸಿಕ್ಕ ಪಂಪ್&zwnj;ಸೆಟ್ ಕೇಬಲ್ ಕಳ್ಳರು: ಕದ್ದ ಕೇಬಲ್&zwnj;ನಿಂದ ಮರಕ್ಕೆ ಕಟ್ಟಿ ಥಳಿಸಿದ ರೈತರು&lt;/strong&gt;&lt;/p&gt;]]></content:encoded>
            <category>gadag</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680"/>
        </item>
        <item>
            <title><![CDATA[ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆ ಆಸೆ;  ತಲೆಮೇಲೆ ಕಲ್ಲು ಹಾಕಿ ಕೊಂದ ಅಣ್ಣ!]]></title>
            <link>https://kannada.asianetnews.com/gallery/karnataka-districts/brother-killed-his-own-younger-brother-by-throwing-a-stone-at-his-head-for-the-sake-of-a-girl-gadag-mrq-ksy0d6u</link>
            <guid isPermaLink="true">https://kannada.asianetnews.com/gallery/karnataka-districts/brother-killed-his-own-younger-brother-by-throwing-a-stone-at-his-head-for-the-sake-of-a-girl-gadag-mrq-ksy0d6u</guid>
            <pubDate>Wed, 18 Mar 2026 07:29:41 +0530</pubDate>
            <description><![CDATA[&lt;p&gt;ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆ ಆಸೆಪಟ್ಟು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದಾನೆ. ಆರೋಪಿ ಅಶೋಕ, ತನ್ನ ತಮ್ಮ ಫಕೀರಪ್ಪನನ್ನು ಹತ್ಯೆ ಮಾಡಿ, ಅಪರಿಚಿತರು ಕೊಂದಿದ್ದಾರೆಂದು ನಾಟಕವಾಡಿದ್ದ. ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkza9fp2b072ksbqj1wprx4x,imgname-gadag-murder-1773798735554.jpg" type="image/jpeg" height="390" width="690"/>
            <content:encoded><![CDATA[&lt;p&gt;ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆ ಆಸೆಪಟ್ಟು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದಾನೆ. ಆರೋಪಿ ಅಶೋಕ, ತನ್ನ ತಮ್ಮ ಫಕೀರಪ್ಪನನ್ನು ಹತ್ಯೆ ಮಾಡಿ, ಅಪರಿಚಿತರು ಕೊಂದಿದ್ದಾರೆಂದು ನಾಟಕವಾಡಿದ್ದ. ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.&lt;/p&gt;&lt;img&gt;&lt;p&gt;ತಮ್ಮನಿಗೆ ನಿಶ್ಚಯಿಸಲಾಗಿದ್ದ ಕನ್ಯೆಗಾಗಿ ಆಸೆಪಟ್ಟಿದ ಅಣ್ಣನೊಬ್ಬ ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;img&gt;&lt;p&gt;ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಕ್ಕಮೂಲಂಗಿ ಗ್ರಾಮದ ಕುರಿಗಾಹಿ ಫಕೀರಪ್ಪ ಕುರವಿನಕೊಪ್ಪ (19) ಮೃತ. ಈತನ ಅಣ್ಣ ಅಶೋಕ ಬಂಧಿತ ಆರೋಪಿ. ಹತ್ಯೆ ಬಳಿಕ ಪೊಲೀಸರಿಗೆ ಕರೆ ಮಾಡಿದ್ದ ಅಶೋಕ್, ಯಾರೋ ದುಷ್ಕರ್ಮಿಗಳು ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆಂದು ಸುಳ್ಳು ಹೇಳಿ ಪಾರಾಗಲು ಯತ್ನಿಸಿದ್ದ.&lt;/p&gt;&lt;img&gt;&lt;p&gt;ಪೊಲೀಸರು ಅನುಮಾನದ ಮೇಲೆ ಅಶೋಕನನ್ನು ವಶಕ್ಕೆ ಪಡೆದು ವಿಚಾಸಿದಾಗ ಸತ್ಯ ಬಯಲಾಗಿದೆ. ಹುಡುಗಿ ವಿಷಯವಾಗಿ ಫಕ್ಕೀರಪ್ಪನ ಜೊತೆಗೆ ಗಲಾಟೆಯಾಗಿತ್ತು. ತಮ್ಮನನ್ನು ಕೊಲೆ ಮಾಡಿದರೆ ಆ ಹುಡುಗಿ ನನಗೆ ಸಿಗುತ್ತಾಳೆ ಎಂದು ಕೃತ್ಯ ಮಾಡಿರುವುದಾಗಿ ಆರೋಪಿ ಅಶೋಕ್ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.&lt;/p&gt;&lt;img&gt;&lt;p&gt;ಅಶೋಕನಿಗೂ ಹಿರಿಯರು ಕನ್ಯೆ ಹುಡುಕಿದ್ದರು. ಆದರೆ, ಆ ಹುಡುಗಿ ಆತನಿಗೆ ಇಷ್ಟ ಇರಲಿಲ್ಲ. ಫಕೀರಪ್ಪನ ಹುಡುಗಿಗೆ ಆಸೆಪಟ್ಟು ತಮ್ಮನನ್ನೇ ಕೊಲೆ ಮಾಡ್ತಾನೆ ಅಂದುಕೊಂಡಿರಲಿಲ್ಲ ಎಂದು ತಾಯಿ ಯಲ್ಲಮ್ಮ ಅಳಲು ತೊಡಿಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Jai Bangla Slogan Case: 'ಜೈ ಬಾಂಗ್ಲಾ' ಘೋಷಣೆ ಕೂಗಿ ಜೈಲು ಸೇರಿದ್ದ ಮಹಿಳೆಗೆ ಹೈಕೋರ್ಟ್ ಜಾಮೀನು&lt;/strong&gt;&lt;/p&gt;&lt;img&gt;&lt;p&gt;ಸುದ್ದಿ ತಿಳಿಯುತ್ತಿದ್ದಂತೆ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೊಲೀಸರ ತನಿಖೆ ವೇಳೆ ಆರೋಪಿ ಅಶೋಕ್ ಸತ್ಯ ಬಾಯಿಬಿಟ್ಡಿದ್ದಾನೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪ್ರೀತಿಗೆ ಅಡ್ಡಿಯಾದ ಜಾತಿ; ಪೊಲೀಸ್&zwnj; ಭದ್ರತೆ ಪಡೆದು, ದೇವಸ್ಥಾನದಲ್ಲಿ ಮದುವೆಯಾದ ಬೆಂಗಳೂರಿನ ಜೋಡಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/brother-killed-his-own-younger-brother-by-throwing-a-stone-at-his-head-for-the-sake-of-a-girl-gadag-mrq-ksy0d6u"/>
        </item>
        <item>
            <title><![CDATA[ಗ್ಯಾಸ್ ಸಿಲಿಂಡರ್ ಉಳಿಸಲು ಹಸಿ ತರಕಾರಿ, ಮೊಳಕೆ ಕಾಳು, ಹಣ್ಣುಗಳನ್ನು ತಿನ್ನಿ; ಜಗದ್ಗುರು ತೋಂಟದಾರ್ಯ ಸ್ವಾಮೀಜಿ!]]></title>
            <link>https://kannada.asianetnews.com/karnataka-districts/gadag-tontadarya-siddarama-swamiji-urges-people-to-eat-raw-veggies-soaked-grains-to-combat-lpg-crisis-sat/articleshow-n84n1xs</link>
            <guid isPermaLink="true">https://kannada.asianetnews.com/karnataka-districts/gadag-tontadarya-siddarama-swamiji-urges-people-to-eat-raw-veggies-soaked-grains-to-combat-lpg-crisis-sat/articleshow-n84n1xs</guid>
            <pubDate>Thu, 12 Mar 2026 18:01:08 +0530</pubDate>
            <description><![CDATA[&lt;p&gt;ಜಾಗತಿಕ ಯುದ್ಧ ಮತ್ತು ಇಂಧನ ಕೊರತೆ ಹಿನ್ನೆಲೆಯಲ್ಲಿ, ಗದಗ ತೋಂಟದಾರ್ಯ ಮಠದ ಶ್ರೀ ಸಿದ್ಧರಾಮ ಸ್ವಾಮೀಜಿಗಳು ಗ್ಯಾಸ್ ಉಳಿಸಲು ಬೇಯಿಸಿದ ಆಹಾರ ಕಡಿಮೆ ಮಾಡಿ ಹಸಿ ತರಕಾರಿ, ನೆನೆಸಿದ ಕಾಳುಗಳನ್ನು ಸೇವಿಸಲು ಹಾಗೂ ಅನಗತ್ಯ ವಾಹನ ಬಳಕೆ ನಿಲ್ಲಿಸಲು ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkh07tf61s9b8cqr4675z4v7,imgname-gadag-tontadarya-siddarama-swamiji-1773318433254.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.12): ಜಾ&lt;/strong&gt;ಗತಿಕ ಮಟ್ಟದಲ್ಲಿ ಉಂಟಾಗಿರುವ ಯುದ್ಧದ ಭೀತಿ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ, ಗದಗದ ಜಗದ್ಗುರು ತೋಂಟದಾರ್ಯ ಮಠದ ಶ್ರೀ ಸಿದ್ಧರಾಮ ಸ್ವಾಮೀಜಿ ಅವರು ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಅತ್ಯಂತ ವಿಶಿಷ್ಟ ಹಾಗೂ ಸಮಯೋಚಿತ ಸಲಹೆಗಳನ್ನು ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಉಳಿತಾಯಕ್ಕಾಗಿ ಜನರು ತಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಆಹಾರ ಪದ್ಧತಿಯಲ್ಲಿ ಬದಲಾವಣೆಗೆ ಶ್ರೀಗಳ ಸಲಹೆ:&lt;/strong&gt;&lt;/h2&gt;&lt;p&gt;ನಗರದ ತೋಂಟದಾರ್ಯ ಮಠದಲ್ಲಿ ಮಾತನಾಡಿದ ಶ್ರೀಗಳು, &lsquo;ಪ್ರಸ್ತುತ ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧಗಳಿಂದಾಗಿ ಪೆಟ್ರೋಲ್, ಡೀಸೆಲ್ ಮತ್ತು ಎಲ್&zwnj;ಪಿಜಿ ಗ್ಯಾಸ್ ಸರಬರಾಜಿನಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಗ್ಯಾಸ್ ಉಳಿತಾಯ ಮಾಡಲು ಜನರು ಬೇಯಿಸಿದ ಆಹಾರದ ಸೇವನೆಯನ್ನು ತುಸು ಕಡಿಮೆ ಮಾಡಬೇಕು. ಬದಲಾಗಿ, ಆರೋಗ್ಯಕ್ಕೂ ಉತ್ತಮವಾಗಿರುವ ನೆನೆಸಿದ ಕಾಳುಗಳು ಹಾಗೂ ಹಸಿ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಇದರಿಂದ ಇಂಧನ ಉಳಿತಾಯವಾಗುವುದಲ್ಲದೆ, ಆರೋಗ್ಯವೂ ವೃದ್ಧಿಸುತ್ತದೆ&rsquo; ಎಂದು ತಿಳಿಸಿದರು.&lt;/p&gt;&lt;h3&gt;&lt;strong&gt;ದಾಸೋಹ ಮಠಗಳಿಗೂ ತಟ್ಟಿದ ಬಿಸಿ:&lt;/strong&gt;&lt;/h3&gt;&lt;p&gt;ಕರ್ನಾಟಕದಲ್ಲಿ ಸಾವಿರಾರು ಮಠಗಳು ನಿತ್ಯವೂ ದಾಸೋಹ (ಅನ್ನದಾನ) ನಡೆಸುತ್ತವೆ. ಆದರೆ ಇಂಧನ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೊರತೆಯಿಂದಾಗಿ ಈ ದಾಸೋಹ ವ್ಯವಸ್ಥೆಗೂ ತುಸು ವ್ಯತ್ಯಯ ಉಂಟಾಗುತ್ತಿದೆ. ಇದನ್ನು ರಾಷ್ಟ್ರದ ಸಮಸ್ಯೆ ಎಂದು ಪರಿಗಣಿಸಿ ಪ್ರತಿಯೊಬ್ಬ ನಾಗರಿಕನೂ ಇಂಧನ ಉಳಿತಾಯಕ್ಕೆ ಕೈಜೋಡಿಸಬೇಕು ಎಂದು ಶ್ರೀಗಳು ಕರೆ ನೀಡಿದರು.&lt;/p&gt;&lt;h2&gt;&lt;strong&gt;ವಾಹನ ಬಳಕೆ ಮಿತವಾಗಿರಲಿ:&lt;/strong&gt;&lt;/h2&gt;&lt;p&gt;ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯ ಬಗ್ಗೆ ಎಚ್ಚರಿಸಿದ ಶ್ರೀಗಳು, &lsquo;ಜನರು ಅನಗತ್ಯವಾಗಿ ವಾಹನಗಳನ್ನು ತೆಗೆದುಕೊಂಡು ಓಡಾಡುವುದನ್ನು ನಿಲ್ಲಿಸಬೇಕು. ಅತ್ಯಂತ ಅವಶ್ಯಕತೆ ಇದ್ದಾಗ ಮಾತ್ರ ವಾಹನಗಳನ್ನು ಬಳಸಬೇಕು. ಸಣ್ಣಪುಟ್ಟ ಕೆಲಸಗಳಿಗೆ ನಡಿಗೆ ಅಥವಾ ಸೈಕಲ್ ಬಳಸುವುದು ಉತ್ತಮ. ನಾವೆಲ್ಲಾ ಭಾರತೀಯರು ಒಟ್ಟಾಗಿ ಈ ಸಮಸ್ಯೆಯನ್ನು ಅರಿತು ಮಿತವ್ಯಯ ಪಾಲಿಸಿದರೆ ಮಾತ್ರ ಈ ಸಂಕಷ್ಟದಿಂದ ಪಾರಾಗಲು ಸಾಧ್ಯ&rsquo; ಎಂದರು.&lt;/p&gt;&lt;h3&gt;&lt;strong&gt;ಜಾಗತಿಕ ನಾಯಕರಿಗೆ ಶಾಂತಿ ಸಂದೇಶ:&lt;/strong&gt;&lt;/h3&gt;&lt;p&gt;ಇದೇ ಸಂದರ್ಭದಲ್ಲಿ ಜಾಗತಿಕ ರಾಜಕೀಯದ ಕುರಿತು ಮಾತನಾಡಿದ ಸಿದ್ಧರಾಮ ಶ್ರೀಗಳು, &quot;ಅಮೆರಿಕದಂತಹ ರಾಷ್ಟ್ರಗಳು ಇತರ ದೇಶಗಳ ಮೇಲೆ ಪ್ರಭುತ್ವ ಸಾಧಿಸಲು ಪ್ರಯತ್ನಿಸುತ್ತಿರುವುದು ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧಗಳು ಜಗತ್ತಿಗೆ ಮಾರಕವಾಗಿವೆ. ಯುದ್ಧದಿಂದ ಯಾರಿಗೂ ಪ್ರಯೋಜನವಿಲ್ಲ, ಕೇವಲ ವಿನಾಶ ಮಾತ್ರ ಸಾಧ್ಯ. ಕೂಡಲೇ ವಿಶ್ವದ ನಾಯಕರು ಮಾತುಕತೆಯ ಮೂಲಕ ಯುದ್ಧಕ್ಕೆ ವಿರಾಮ ಹಾಡಬೇಕು. ಭಾರತದ ರಾಜಕೀಯ ನಾಯಕರೂ ಸಹ ಈ ಇಂಧನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಚಿಸಬೇಕು&quot; ಎಂದು ಒತ್ತಿ ಹೇಳಿದರು.&lt;/p&gt;&lt;p&gt;ಗದಗ ಶ್ರೀಗಳ ಈ ನಡೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪರಿಸರ ಪ್ರೇಮಿಗಳು ಮತ್ತು ಆರ್ಥಿಕ ತಜ್ಞರು ಶ್ರೀಗಳ ಈ 'ಮಿತವ್ಯಯದ ಮಂತ್ರ'ವನ್ನು ಸ್ವಾಗತಿಸಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/gadag-tontadarya-siddarama-swamiji-urges-people-to-eat-raw-veggies-soaked-grains-to-combat-lpg-crisis-sat/articleshow-n84n1xs"/>
        </item>
        <item>
            <title><![CDATA[Ambulance: ಗದಗ ರೋಗಿಗಳನ್ನ ಸಾಗಿಸಬೇಕಿದ್ದ ಜಿಮ್ಸ್ ಆಂಬುಲೆನ್ಸ್‌ನಲ್ಲಿ ಕುರಿಗಳಂತೆ ತುಂಬಿ ಪ್ರಯಾಣಿಕರ ಸಾಗಾಟ! ವಿಡಿಯೋ ವೈರಲ್]]></title>
            <link>https://kannada.asianetnews.com/karnataka-districts/gadag-gims-ambulance-meant-for-patients-used-to-ferry-passengers-video-viral/articleshow-ru15gyg</link>
            <guid isPermaLink="true">https://kannada.asianetnews.com/karnataka-districts/gadag-gims-ambulance-meant-for-patients-used-to-ferry-passengers-video-viral/articleshow-ru15gyg</guid>
            <pubDate>Mon, 09 Mar 2026 12:16:03 +0530</pubDate>
            <description><![CDATA[ಗದಗ ಜಿಲ್ಲಾಸ್ಪತ್ರೆಯ ಆಂಬುಲೆನ್ಸ್&zwnj;ಗಳನ್ನು ರೋಗಿಗಳ ಬದಲು ಸಾಮಾನ್ಯ ಪ್ರಯಾಣಿಕರನ್ನು ಸಾಗಿಸಲು ಅಕ್ರಮವಾಗಿ ಬಳಸಲಾಗುತ್ತಿದೆ. ಈ ಕಾನೂನುಬಾಹಿರ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕರು ಹಣಕ್ಕಾಗಿ ಆಂಬುಲೆನ್ಸ್&zwnj;ಗಳನ್ನು ಟ್ಯಾಕ್ಸಿಯಂತೆ ಬಳಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kk8n7mmfq9anq636xwsyamdh,imgname-----------------------2026-03-09t121041.080-1773038457487.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.9): &lt;/strong&gt;ರೋಗಿಗಳ ಜೀವ ಉಳಿಸಬೇಕಾದ ಆಂಬುಲೆನ್ಸ್&zwnj;ಗಳು ಈಗ ಹಣ ಮಾಡುವ ದಂಧೆಗೆ ಇಳಿದಿವೆಯೇ ಎಂಬ ಅನುಮಾನ ಕಾಡತೊಡಗಿದೆ. ಗದಗ ಜಿಲ್ಲಾಸ್ಪತ್ರೆ (ಜಿಮ್ಸ್) ಆವರಣದಲ್ಲಿ ರೋಗಿಗಳನ್ನು ಸಾಗಿಸಬೇಕಾದ ಆಂಬುಲೆನ್ಸ್&zwnj;ಗಳಲ್ಲಿ ಸಾಮಾನ್ಯ ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಸಾಗಿಸುತ್ತಿರುವ ಆಘಾತಕಾರಿ ದೃಶ್ಯಗಳು ಬೆಳಕಿಗೆ ಬಂದಿವೆ.&lt;/p&gt;&lt;h2&gt;ಜಿಮ್ಸ್ ಆಸ್ಪತ್ರೆಯಿಂದ 'ಪಿಕ್ ಅಂಡ್ ಡ್ರಾಪ್' ಸೇವೆ!&lt;/h2&gt;&lt;p&gt;ಗದಗ ಜಿಮ್ಸ್ ಆಸ್ಪತ್ರೆಯಿಂದ ನಗರದ ವಿವಿಧ ಭಾಗಗಳಿಗೆ ಹೋಗುವ ಜನರಿಗೆ ಆಂಬುಲೆನ್ಸ್ ಚಾಲಕರು ಡ್ರಾಪ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿತ್ಯವೂ ಆಸ್ಪತ್ರೆ ಆವರಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುವುದು ಈಗ ಇಲ್ಲಿ ಸಾಮಾನ್ಯ ಎಂಬಂತಾಗಿದೆ. ರೋಗಿಗಳ ಸೇವೆಗೆ ಮೀಸಲಿಟ್ಟ ವಾಹನವನ್ನು ಚಾಲಕರು ತಮ್ಮ ಸ್ವಂತ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;h3&gt;ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್&lt;/h3&gt;&lt;p&gt;ಆಂಬುಲೆನ್ಸ್&zwnj;ನಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್&zwnj;ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆರೋಗ್ಯ ಇಲಾಖೆಗೆ ಸೇರಿದ ವಾಹನದಲ್ಲೇ ಇಂತಹ ಕಾನೂನುಬಾಹಿರ ಕೃತ್ಯ ನಡೆಯುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;p&gt;&lt;strong&gt;ಆಂಬುಲೆನ್ಸ್ ನಿಯಮ ಗಾಳಿಗೆ ತೂರಿದ ಚಾಲಕರು&lt;/strong&gt;&lt;/p&gt;&lt;p&gt;ಆರ್&zwnj;ಟಿಓ (RTO) ನಿಯಮಗಳ ಪ್ರಕಾರ, ಆಂಬುಲೆನ್ಸ್&zwnj;ಗಳಿಗೆ 'ಸೇವಾ ವಾಹನ' (Service Vehicle) ಎಂಬ ವಿಶೇಷ ಪರ್ಮಿಟ್ ಇರುತ್ತದೆ. ಇದನ್ನು ಟ್ಯಾಕ್ಸಿ ಅಥವಾ ಕ್ಯಾಬ್&zwnj;ಗಳಂತೆ ಬಳಸುವುದು ಮೋಟಾರು ವಾಹನ ಕಾಯ್ದೆಯಡಿ ಗಂಭೀರ ಅಪರಾಧ. ಪ್ರಯಾಣಿಕರನ್ನು ಸಾಗಿಸುವುದು ಕಂಡುಬಂದಲ್ಲಿ ಆ ವಾಹನದ ನೋಂದಣಿ ಮತ್ತು ಚಾಲಕನ ಪರವಾನಗಿಯನ್ನು (License) ತಕ್ಷಣವೇ ರದ್ದುಗೊಳಿಸಲು ಅವಕಾಶವಿದೆ.&lt;/p&gt;&lt;p&gt;&lt;strong&gt;ಟ್ರಾಫಿಕ್ ತಪ್ಪಿಸಲು ಸೈರನ್ ದುರ್ಬಳಕೆ?&lt;/strong&gt;&lt;/p&gt;&lt;p&gt;ಆಂಬುಲೆನ್ಸ್ ಒಳಗೆ ಕೇವಲ ರೋಗಿ, ಅವರ ಸಹಾಯಕರು ಮತ್ತು ವೈದ್ಯಕೀಯ ಸಿಬ್ಬಂದಿ ಮಾತ್ರ ಇರಬೇಕು. ಆದರೆ, ಇಲ್ಲಿ ಹಣದಾಸೆಗೆ ಪ್ರಯಾಣಿಕರನ್ನು ತುಂಬಲಾಗುತ್ತಿದೆ. ಒಂದು ವೇಳೆ ಟ್ರಾಫಿಕ್ ತಪ್ಪಿಸಲು ಸೈರನ್ ಬಳಸಿದರೆ, ಅದು ನಿಜವಾದ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಮಾಡುವ ದೊಡ್ಡ ದ್ರೋಹವಾಗಿದೆ. ಅಲ್ಲದೆ, ಪ್ರಯಾಣಿಕರ ಸಾಗಾಟದಿಂದ ಆಂಬುಲೆನ್ಸ್&zwnj;ನೊಳಗಿನ ನೈರ್ಮಲ್ಯಕ್ಕೂ ಧಕ್ಕೆಯಾಗುತ್ತಿದೆ.&lt;/p&gt;&lt;p&gt;&lt;strong&gt;ಟ್ಯಾಕ್ಸಿ ಕ್ಯಾಬ್&zwnj;ಗಳಂತೆ ಬಾಡಿಗೆ ದಂಧೆಯ ಶಂಕೆ?&lt;/strong&gt;&lt;/p&gt;&lt;p&gt;ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಸಿಗದ ಆಂಬುಲೆನ್ಸ್&zwnj;ಗಳು ಹೀಗೆ ಬೇಕಾಬಿಟ್ಟಿ ಓಡಾಡುತ್ತಿರುವುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಇದು ಕೇವಲ ಡ್ರಾಪ್ ಸೇವೆಯೋ ಅಥವಾ ಟ್ಯಾಕ್ಸಿ ಕ್ಯಾಬ್&zwnj;ಗಳಂತೆ ಆಂಬುಲೆನ್ಸ್ ಬಾಡಿಗೆ ದಂಧೆ ಮೇಲೆ ನಡೆಯುತ್ತಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಎಚ್ಚೆತ್ತು ತಪ್ಪಿತಸ್ಥ ಚಾಲಕರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಓದುಗರ ಗಮನಕ್ಕೆ&lt;/strong&gt;: ಆಂಬುಲೆನ್ಸ್&zwnj;ಗಳನ್ನು ವೈಯಕ್ತಿಕ ಕಾರ್ಯಗಳಿಗೆ ಅಥವಾ ಪ್ರಯಾಣಕ್ಕೆ ಬಳಸುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ 100 ಅಥವಾ ಹತ್ತಿರದ ಆರ್&zwnj;ಟಿಓ ಕಚೇರಿಗೆ ದೂರು ನೀಡಬಹುದಾಗಿದೆ.&lt;/p&gt;]]></content:encoded>
            <category>gadag</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/gadag-gims-ambulance-meant-for-patients-used-to-ferry-passengers-video-viral/articleshow-ru15gyg"/>
        </item>
        <item>
            <title><![CDATA[ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ: ಸಚಿವ ಎಚ್.ಕೆ.ಪಾಟೀಲ]]></title>
            <link>https://kannada.asianetnews.com/politics/international-womens-day-gadag-hk-patil-congress-schemes-gvd/articleshow-shwnmqq</link>
            <guid isPermaLink="true">https://kannada.asianetnews.com/politics/international-womens-day-gadag-hk-patil-congress-schemes-gvd/articleshow-shwnmqq</guid>
            <pubDate>Mon, 09 Mar 2026 22:12:00 +0530</pubDate>
            <description><![CDATA[&lt;p&gt;ಗ್ಯಾರಂಟಿ ಯೋಜನೆಗಳಿಂದ ಬಡತನವನ್ನು ಬೇರುಸಮೇತ ಕಿತ್ತೊಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಿ ಪರಿಗಣಿಸಲ್ಪಡುವ ಕಾನೂನು ರೂಪುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k2bahth6a7x7gcxndwa4d97g,imgname-ngn-1754874309158.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.09): &lt;/strong&gt;ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡತನವನ್ನು ಬೇರುಸಮೇತ ಕಿತ್ತೊಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಿ ಪರಿಗಣಿಸಲ್ಪಡುವ ಕಾನೂನು ರೂಪುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.&lt;/p&gt;&lt;p&gt;ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯ ದೊರಕಬೇಕು ಎಂದು ಬಸವಣ್ಣನವರು ಹೋರಾಟ ನಡೆಸಿದರು. ಶ್ರೇಣಿಕೃತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ದೊರಕದ ಹಿನ್ನೆಲೆ ಅದನ್ನು ಸರಿಪಡಿಸಲು ತಮ್ಮ ಜೀವನವನ್ನೇ ಬಸವಣ್ಣನವರು ಮುಡಿಪಾಗಿಟ್ಟರು ಎಂದರು.&lt;/p&gt;&lt;p&gt;ರಾಜಕೀಯವಾಗಿ ಪಂಚಾಯತ್ ವ್ಯವಸ್ಥೆಯಲ್ಲಿ ಶೇ. 50ರಷ್ಟು ಮೀಸಲಾತಿ ನೀಡುವುದರ ಮೂಲಕ ಮಹಿಳೆಯರು ಆಡಳಿತ ಹಾಗೂ ಅಧಿಕಾರವನ್ನು ಸಮರ್ಥವಾಗಿ ನಿರ್ವಹಿಸಬಲ್ಲರು ಎಂಬುದನ್ನು ಸಾಬೀತು ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬಹುಕಾಲ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ. ಇಂದು ಪ್ರತಿ ಗ್ರಾಮದಲ್ಲೂ ಇಂದಿರಾ ಗಾಂಧಿಯಂತಹ ಶಕ್ತಿಯುತ ಮಹಿಳೆಯರು ಇದ್ದಾರೆ ಎಂದರು.&lt;/p&gt;&lt;p&gt;ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಮಹಿಳೆಯರನ್ನು ಮಾತೃಭೂಮಿ ಎಂದು ಸಂಬೋಧಿಸುವ ಮೂಲಕ ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ವಿಶ್ವಾದ್ಯಂತ ಮಹಿಳೆಯರಿಗೆ ಮಹತ್ವದ ಸ್ಥಾನಮಾನ ನೀಡಲಾಗುತ್ತಿದೆ. ಮಹಿಳೆ ಸಮಾಜದಲ್ಲಿ ಹಲವಾರು ರೂಪಗಳಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು.&lt;/p&gt;&lt;p&gt;ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಮಹಿಳೆಯರಲ್ಲಿ ಅಗಾಧ ಶಕ್ತಿ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ. ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.&lt;/p&gt;&lt;h2&gt;&lt;strong&gt;ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ&lt;/strong&gt;&lt;/h2&gt;&lt;p&gt;2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಗೆ ಮಹಿಳೆಯರು ಪ್ರಮುಖ ಕಾರಣರಾಗಿದ್ದಾರೆ. ಇದಕ್ಕಾಗಿ ಮಹಿಳೆಯರ ಕಲ್ಯಾಣಕ್ಕೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಅವು ನಿರಂತರವಾಗಿ ಮುಂದುವರಿಯುತ್ತವೆ. ರಾಜ್ಯದಲ್ಲಿ ಸುಮಾರು 1.20 ಕೋಟಿ ಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಈ ಯೋಜನೆಗಳು ಸಹಾಯಕವಾಗಿವೆ ಎಂದರು.&lt;/p&gt;&lt;p&gt;ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಮಹಿಳೆ ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಸೊಸೆಯಾಗಿ, ಅತ್ತೆಯಾಗಿ ಹಾಗೂ ಅಜ್ಜಿಯಾಗಿ ಹಲವು ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು. ಈ ವೇಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು ಯೋಜನೆಗಳಿಂದ ಜೀವನದಲ್ಲಿ ಆಗಿರುವ ಬದಲಾವಣೆಗಳನ್ನು ವಿವರಿಸಿದರು.&lt;/p&gt;&lt;p&gt;ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಪ್ರಕಾಶ ಆಕಳವಾಡಿ, ಅಶೋಕ್ ಮಂದಾಲಿ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಸೋಮನಕಟ್ಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್&zwnj;, ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಸಹಾಯಕ ಆಯುಕ್ತ ಗಂಗಪ್ಪ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಂ.ವಿ. ಚಳಗೇರಿ, ಪದ್ಮಾವತಿ ಜಿ. ಸೇರಿದಂತೆ ಅಧಿಕಾರಿಗಳು ಇದ್ದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/international-womens-day-gadag-hk-patil-congress-schemes-gvd/articleshow-shwnmqq"/>
        </item>
        <item>
            <title><![CDATA[ಗದಗ: ರಥೋತ್ಸವದ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ದಾರಿ ಬಿಡುವಂತೆ ಹೇಳಿದ್ದಕ್ಕೆ ಹಲ್ಲೆ? ಸಲೀಂ ಗ್ಯಾಂಗ್ ಅರೆಸ್ಟ್!]]></title>
            <link>https://kannada.asianetnews.com/gallery/karnataka-districts/gadag-chariot-festival-clash-accused-arrested-after-attacking-devotees-over-car-parking-dispute-tegkxqx</link>
            <guid isPermaLink="true">https://kannada.asianetnews.com/gallery/karnataka-districts/gadag-chariot-festival-clash-accused-arrested-after-attacking-devotees-over-car-parking-dispute-tegkxqx</guid>
            <pubDate>Fri, 20 Mar 2026 09:58:16 +0530</pubDate>
            <description><![CDATA[&lt;p&gt;Gadag Chariot Festival Clash ಗದಗ ರಥೋತ್ಸವ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ತೆಗೆಯೋಕೆ ಹೇಳಿದ್ದಕ್ಕೆ ಹಲ್ಲೆ ಭಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದಿದ್ದು ಹೇಗೆ?&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km4pkpmaksdemmtkn2c7y3p1,imgname-whatsapp-image-2026-03-20-at-9.10.14-am-1773979425418.jpeg" type="image/jpeg" height="390" width="690"/>
            <content:encoded><![CDATA[&lt;p&gt;Gadag Chariot Festival Clash ಗದಗ ರಥೋತ್ಸವ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ತೆಗೆಯೋಕೆ ಹೇಳಿದ್ದಕ್ಕೆ ಹಲ್ಲೆ ಭಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದಿದ್ದು ಹೇಗೆ?&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದ ನಡುವೆಯೇ ಕಿರಿಕ್ ನಡೆದಿದ್ದು, ಕಾರು ತೆರವುಗೊಳಿಸುವ ವಿಚಾರವಾಗಿ ಆರಂಭವಾದ ಜಗಳ ಹಲ್ಲೆಯಲ್ಲಿ ಅಂತ್ಯವಾಗಿದೆ.&lt;/p&gt;&lt;img&gt;&lt;p&gt;ಇದನ್ನು ಕಂಡ ಜಾತ್ರಾ ಕಮಿಟಿಯ ಯುವಕರು, ರಥ ಬರಲು ದಾರಿ ಮಾಡಿಕೊಡುವಂತೆ ಮತ್ತು ಕಾರನ್ನು ಪಕ್ಕಕ್ಕೆ ಸರಿಸುವಂತೆ ವಿನಂತಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.&lt;/p&gt;&lt;img&gt;&lt;p&gt;ಕಾರು ಸರಿಸಲು ನಿರಾಕರಿಸಿದ ಸಲೀಂ ತಂಡದವರು, ಜಾತ್ರಾ ಕಮಿಟಿಯ ಸದಸ್ಯರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಥೋತ್ಸವದಂತಹ ದೇವರ ಆಚರಣೆ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;img&gt;&lt;p&gt;ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಮತ್ತು ಕಮಿಟಿಯವರು ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದಾರೆ.&lt;/p&gt;&lt;img&gt;&lt;p&gt;ಜಾತ್ರಾ ಕಮಿಟಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಕ್ಷಣವೇ ಕಾರ್ಯಪ್ರವೃತ್ತರಾಗಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಗ್ರಾಮದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿದುಬಂದಿದೆ.&lt;/p&gt;&lt;p&gt;&lt;strong&gt;ಬಂಧಿತ ಕಿಡಿಗೇಡಿಗಳು&lt;/strong&gt;&lt;/p&gt;&lt;ul&gt; &lt;li&gt;ಸಲೀಂ ಬಡೇಖಾನ್&lt;/li&gt; &lt;li&gt;ಲೋಕೇಶ್ ರಾಮಜಿ&lt;/li&gt; &lt;li&gt;ಮಂಜುನಾಥ್ ಹಾದಿಮನಿ&lt;/li&gt;&lt;/ul&gt;&lt;img&gt;&lt;p&gt;ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಥವಾ ಧಾರ್ಮಿಕ ಮೆರವಣಿಗೆಗಳ ವೇಳೆ ಸಂಯಮ ಮತ್ತು ಪರಸ್ಪರ ಗೌರವ ಬಹಳ ಮುಖ್ಯ. ಪೊಲೀಸರ ಈ ತ್ವರಿತ ಕ್ರಮದಿಂದ ಹೆಚ್ಚಿನ ಅಹಿತಕರ ಘಟನೆಗಳು ತಪ್ಪಿದಂತಾಗಿದೆ.&lt;/p&gt;]]></content:encoded>
            <category>gadag</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/gadag-chariot-festival-clash-accused-arrested-after-attacking-devotees-over-car-parking-dispute-tegkxqx"/>
        </item>
        <item>
            <title><![CDATA[ಕೊನೆಗೂ ಬಯಲಾದ ಲಕ್ಕುಂಡಿಯಲ್ಲಿ ಸಿಕ್ಕಿರುವ ಚಿನ್ನದ ರಹಸ್ಯ]]></title>
            <link>https://kannada.asianetnews.com/karnataka-districts/gold-found-in-lakkundi-belongs-to-vijayanagara-empire-era-jewellery/articleshow-ve8sv2o</link>
            <guid isPermaLink="true">https://kannada.asianetnews.com/karnataka-districts/gold-found-in-lakkundi-belongs-to-vijayanagara-empire-era-jewellery/articleshow-ve8sv2o</guid>
            <pubDate>Wed, 11 Mar 2026 04:09:15 +0530</pubDate>
            <description><![CDATA[&lt;p&gt;ದೇಶದ ಗಮನ&zwnj; ಸೆಳೆದಿದ್ದ ತಾಲೂಕಿನ ಲಕ್ಕುಂಡಿಯಲ್ಲಿ ದೊರೆತಿದ್ದ ಚಿನ್ನವು 470 ಗ್ರಾಂ ಇದ್ದು, ವಿಜಯನಗರ ಕಾಲದ ಆಭರಣ ಸಾಧ್ಯತೆ ಎಂದು ಲಕ್ಕುಂಡಿ ಚಿನ್ನದ ನಿಧಿ ಕುರಿತು ಪರಿಶೀಲನೆ ನಡೆಸಿದ ತಜ್ಞ ಸಮಿತಿಯ ಅಧ್ಯಕ್ಷ ಡಾ. ಎಂ.ಎಸ್. ಕೃಷ್ಣಮೂರ್ತಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkcy48xa3gdncqvf7tb0mm8n,imgname-lakkundi-1773182002090.avif" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ&lt;/strong&gt;: ದೇಶದ ಗಮನ&zwnj; ಸೆಳೆದಿದ್ದ ತಾಲೂಕಿನ ಲಕ್ಕುಂಡಿಯಲ್ಲಿ ದೊರೆತಿದ್ದ ಚಿನ್ನವು 470 ಗ್ರಾಂ ಇದ್ದು, ವಿಜಯನಗರ ಕಾಲದ ಆಭರಣ ಸಾಧ್ಯತೆ ಎಂದು ಲಕ್ಕುಂಡಿ ಚಿನ್ನದ ನಿಧಿ ಕುರಿತು ಪರಿಶೀಲನೆ ನಡೆಸಿದ ತಜ್ಞ ಸಮಿತಿಯ ಅಧ್ಯಕ್ಷ ಡಾ. ಎಂ.ಎಸ್. ಕೃಷ್ಣಮೂರ್ತಿ ಹೇಳಿದರು.&lt;/p&gt;&lt;p&gt;ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಿಧಿ ಕಾಲಾವಧಿ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿ, ನಿಧಿಯ ಆಕಾರ, ವಿನ್ಯಾಸ, ರೂಪುರೇಷೆ ಹಾಗೂ ಶಿಲ್ಪ ಆಭರಣಗಳ ಕಲಾತ್ಮಕ ವಿನ್ಯಾಸಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಈ ಚಿನ್ನದ ನಿಧಿ ಸುಮಾರು 500ರಿಂದ 600 ವರ್ಷಗಳ ಹಿಂದಿನ ವಿಜಯನಗರ ಕಾಲದ ಅರಸರ ಅವಧಿಯ ಆಭರಣಗಳು ಇರಬಹುದು ಎಂದರು.&lt;/p&gt;&lt;h2&gt;&lt;strong&gt;ಕಂಚಿನ ದೇವತೆಯ ಅಲಂಕಾರದ ಆಭರಣಗಳು&lt;/strong&gt;&lt;/h2&gt;&lt;p&gt;ಪತ್ತೆಯಾದ ಆಭರಣಗಳು ಕಂಚಿನ ದೇವತೆಯ ಅಲಂಕಾರದ ಆಭರಣಗಳು ಆಗಿವೆ. ಸಿಂಹ ಮತ್ತು ಕೀರ್ತಿಮುಖದ ಆಕೃತಿ ಜತೆಗೆ ನೀಲಮಣಿ, ಮುತ್ತು, ಪಚ್ಚೆ, ಹವಳ ಹಾಗೂ ಹರಳುಗಳನ್ನು ಅಲಂಕಾರಿಕ ಚಿನ್ನಾಭರಣಗಳಲ್ಲಿ ಬಳಸಲಾಗುತ್ತದೆ. ಹೀಗಾಗಿ ಹೆಣ್ಣು ದೇವರ ಮೂರ್ತಿಗಳಿಗೆ ಅಲಂಕರಿಸಲು ಬಳಸಿದ ಆಭರಣಗಳು ಇರಬಹುದು. ಕಿವಿಯೋಲೆಗಳು, ನಾಗರಹೆಡೆ ಮಾದರಿಯ ಆಭರಣಗಳು ಹಾಗೂ ಸೂಕ್ಷ್ಮ ಕೆತ್ತನೆಗಳು ಆಭರಣಗಳಲ್ಲಿ ಸ್ಪಷ್ಟವಾಗಿ ಕಾಣುತ್ತವೆ ಎಂದರು.&lt;/p&gt;&lt;h3&gt;&lt;strong&gt;ಚಿನ್ನದ ಆಭರಣಗಳ ಇಂದಿನ ಬಂಗಾರದ ಮೌಲ್ಯ ಸುಮಾರು ₹80 ಲಕ್ಷ&lt;/strong&gt;&lt;/h3&gt;&lt;p&gt;ಈ ಚಿನ್ನದ ಆಭರಣಗಳ ಇಂದಿನ ಬಂಗಾರದ ಮೌಲ್ಯ ಸುಮಾರು ₹80 ಲಕ್ಷ ಆಗಬಹುದು. ಆದರೆ ಇವು ಅಪರೂಪದ ಪುರಾತನ ಆಭರಣಗಳಾಗಿರುವುದರಿಂದ ಅದರ ನಿಖರ ಮೌಲ್ಯ ಈಗಿನ ಮೌಲ್ಯಕ್ಕಿಂತ 10 ಪಟ್ಟು ಅಧಿಕ ಆಗುತ್ತದೆ ಎಂದರು.&lt;/p&gt;&lt;p&gt;ಈ ಸಂದರ್ಭದಲ್ಲಿ &zwnj;ಸಮಿತಿ&zwnj; ಸದಸ್ಯರಾದ ಡಾ. ಎಂ.ಎಸ್. ಕೃಷ್ಣಮೂರ್ತಿ, ಡಾ. ರಾಘವೇಂದ್ರರಾವ್ ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಹನುಮಾಕ್ಷಿ ಗೋಗಿ, ಪ್ರಭು ಕಮ್ಮಾರ, ಡಾ. ಆರ್. ಶೈಜೇಶ್ವರ ಹಾಗೂ ತಜ್ಞರ ಡಿಸಿ ಸಿ.ಎನ್. ಶ್ರೀಧರ್, ಎಸಿ ಗಂಗಪ್ಪ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಶರಣು ಗೊಗೇರಿ, ಸದಸ್ಯ ಸಿದ್ದು ಪಾಟೀಲ ಸೇರಿದಂತೆ ಇತರರು ಇದ್ದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gold-found-in-lakkundi-belongs-to-vijayanagara-empire-era-jewellery/articleshow-ve8sv2o"/>
        </item>
        <item>
            <title><![CDATA[Education quality: ಶಿಕ್ಷಕರಿಗೆ  ಬೋಧನೆ ಬಿಟ್ಟು ಬೇರೆ ಕೆಲಸ ನೀಡಬಾರದು -ಬಸವರಾಜ ಹೊರಟ್ಟಿ]]></title>
            <link>https://kannada.asianetnews.com/state/speaker-basavaraj-horatti-says-to-improve-quality-of-education-teachers-must-not-be-assigned-non-teaching-tasks/articleshow-x05as13</link>
            <guid isPermaLink="true">https://kannada.asianetnews.com/state/speaker-basavaraj-horatti-says-to-improve-quality-of-education-teachers-must-not-be-assigned-non-teaching-tasks/articleshow-x05as13</guid>
            <pubDate>Sun, 08 Mar 2026 09:48:08 +0530</pubDate>
            <description><![CDATA[&lt;p&gt;Teachers' role in education quality ಗದಗದಲ್ಲಿ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ ಬಸವರಾಜ ಹೊರಟ್ಟಿ, ಶಿಕ್ಷಕರಿಗೆ ಬೋಧನೆ ಬಿಟ್ಟು ಬೇರೆ ಕೆಲಸ ನೀಡಬಾರದು ಎಂದರು. ಶೇ.100 ಎಸ್&zwnj;ಎಸ್&zwnj;ಎಲ್&zwnj;ಸಿ ಫಲಿತಾಂಶ ಪಡೆದ ಶಾಲೆಗಳ ಸನ್ಮಾನದ ಕುರಿತು ತಿಳಿಯಿರಿ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk5svbf6f4tfqqayhk4c203f,imgname----------------------90--1772942634470.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮಾ.8):&lt;/strong&gt; ಶಿಕ್ಷಣದ ಗುಣಮಟ್ಟ ಹೆಚ್ಚಳವಾಗಬೇಕಾದರೆ ಶಿಕ್ಷಕರಿಗೆ ಇಲಾಖೆ ಅಥವಾ ಸರ್ಕಾರ ಬೋಧನೆ ಬಿಟ್ಟರೆ ಯಾವುದೇ ಅನ್ಯ ಕೆಲಸಗಳನ್ನು ನೀಡಬಾರದು ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಎಸ್&zwnj;ಎಸ್&zwnj;ಎಲ್&zwnj;ಸಿ ಶೇ. 100 ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ಸನ್ಮಾನ, ಫಲಿತಾಂಶ ಸುಧಾರಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಸಮಾಜದ ಶಿಲ್ಪಿಗಳು, ಆಧುನಿಕ ಸಮಾಜದ ವ್ಯವಸ್ಥೆಗೆ ತಕ್ಕಂತೆ ಮಕ್ಕಳಲ್ಲಿ ಜ್ಞಾನ ತುಂಬುವ ಕಾರ್ಯ ಮಾಡುತ್ತಾರೆ ಎಂದು ಹೇಳಿದರು.&lt;/p&gt;&lt;p&gt;ಕಾಂಗ್ರೆಸ್&zwnj; ಯುವ ಮುಖಂಡ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಜ್ಞಾನವನ್ನು ಮಕ್ಕಳಿಗೆ ನೀಡಿ ಗುಣಾತ್ಮಕ ಫಲಿತಾಂಶ ಪಡೆಯುವಂತೆ ಪ್ರೇರಣಾದಾಯಕ ಕಲಿಕೆಯನ್ನು ಎಲ್ಲ ಗುರುಬಳಗ ಮಾಡುವುದರಿಂದ ಯಾವುದೇ ಸ್ಪರ್ಧೆಯಲ್ಲಿ ಮಕ್ಕಳು ಉತ್ತಮ ಫಲಿತಾಂಶ ಪಡೆಯಲು ಅರ್ಹರಾಗಿರುತ್ತಾರೆ ಎಂದರು.&lt;/p&gt;&lt;p&gt;ವಿಪ ಸದಸ್ಯ ಎಸ್.ವಿ. ಸಂಕನೂರ, ಬೈರನಹಟ್ಟಿ ಶಾಂತಲಿಂಗ ಶ್ರೀಗಳು ಮಾತನಾಡಿದರು. ಪ್ರತಿಶತ 100 ಫಲಿತಾಂಶ ಪಡೆದ 76 ಶಾಲಾ ಮುಖ್ಯಶಿಕ್ಷಕರಿಗೆ ಸರ್ಕಾರದಿಂದ ನೀಡಿದ ಪ್ರಶಸ್ತಿ ಫಲಕ ಹಾಗೂ ತಲಾ ₹25,000 ಚೆಕ್&zwnj;ಗಳನ್ನು ನೀಡಿ ಗೌರವಿಸಲಾಯಿತು.&lt;/p&gt;&lt;p&gt;ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಉಪನಿರ್ದೇಶಕ ಆರ್.ಎಸ್. ಬುರಡಿ, ಎಂ.ಕೆ. ಲಮಾಣಿ, ಎ.ಎಸ್. ಪಾಟೀಲ, ಈಶ್ವರ ನಾಯಕ, ಜಿ.ಆರ್. ಭಟ್, ಉಮೇಶ ಹಿರೇಮಠ, ರವಿ ದಂಡಿನ, ಡಾ. ಬಿ.ಜಿ. ಜವಳಿ, ಎಸ್.ಎಸ್. ಪಟ್ಟಣಶೆಟ್ಟರ, ಡಾ. ಶರಣು ಗೋಗೇರಿ, ಡಾ. ಬಸವರಾಜ ಬಳ್ಳಾರಿ, ವಿ.ವಿ. ನಡುವಿನಮನಿ, ಎಂ.ಎಚ್. ಕಂಬಳಿ, ಎ.ಎನ್. ಕಂಬೋಗಿ, ಶ್ರೀನಿವಾಸ ಹುಯಿಲಗೋಳ, ಬಿ.ಎಫ್. ಪೂಜಾರ, ರವೀಂದ್ರ ಶೆಟ್ಟೆಪ್ಪನವರ, ಗಂಗಾಧರ ಅಣ್ಣಿಗೇರಿ, ಎಚ್.ಬಿ. ರಡ್ಡೇರ, ಕನವಳ್ಳಿ, ಬಿ.ಡಿ. ಯರಗೊಪ್ಪ, ಬೂದಪ್ಪ ಅಂಗಡಿ, ನವೀನ ಬಸವರಡ್ಡಿ, ಡಿ.ಎನ್. ಮರಡ್ಡಿ, ಎಲ್.ಎಸ್. ಅರಳಿಹಳ್ಳಿ, ಎಚ್.ಟಿ. ಬಿಜ್ಜೂರ, ಬಿ.ಕೆ. ನಿಂಬನಗೌಡರ, ಆರ್.ವಿ. ಗೊಂಡಬಾಳ, ಝಡ್.ಎಂ. ಖಾಜಿ, ಬಿ.ಸಿ. ಗುಳೇದ ಹಾಗೂ ಜಿಲ್ಲಾ ಸಮಸ್ತ ಪ್ರೌಢಶಾಲಾ ಶಿಕ್ಷಕ ಬಳಗ ಇದ್ದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/speaker-basavaraj-horatti-says-to-improve-quality-of-education-teachers-must-not-be-assigned-non-teaching-tasks/articleshow-x05as13"/>
        </item>
        <item>
            <title><![CDATA[ಲಂಚ ಪ್ರಕರಣ: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಶಾಸಕ ಡಾ. ಚಂದ್ರು ಲಮಾಣಿಗೆ ಬೇಲ್!]]></title>
            <link>https://kannada.asianetnews.com/state/conditional-bail-granted-to-mla-dr-chandru-lamani-who-was-caught-in-lokayukta-trap/articleshow-y13ohw9</link>
            <guid isPermaLink="true">https://kannada.asianetnews.com/state/conditional-bail-granted-to-mla-dr-chandru-lamani-who-was-caught-in-lokayukta-trap/articleshow-y13ohw9</guid>
            <pubDate>Thu, 12 Mar 2026 06:17:21 +0530</pubDate>
            <description><![CDATA[&lt;p&gt;MLA Chandru Lamani bribery case ಲಂಚ ಪ್ರಕರಣದಲ್ಲಿ ಲೋಕಾಯುಕ್ತರಿಂದ ಬಂಧಿತರಾಗಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಇತರ ಇಬ್ಬರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kj7cd9xccsy0scggmm10f4b9,imgname-chandru-lamani--2--1771921909676.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಲಕ್ಷ್ಮೇಶ್ವರ (ಮಾ.12):&lt;/strong&gt; ಲಂಚ ಪ್ರಕರಣದ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಇತರ ಇಬ್ಬರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.&lt;/p&gt;&lt;p&gt;ಫೆ. 21ರಂದು ಲೋಕಾಯುಕ್ತ ದಾಳಿ ವೇಳೆ ಬಂಧನಕ್ಕೆ ಒಳಗಾಗಿದ್ದ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.&lt;/p&gt;&lt;p&gt;&lt;strong&gt;ಪ್ರಕರಣದ ಹಿನ್ನೆಲೆ&lt;/strong&gt;: ಕಳೆದ ಫೆ. 21ರಂದು ಲಕ್ಷ್ಮೇಶ್ವರದ ಶಾಸಕರ ಒಡೆತನದ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರು ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.&lt;/p&gt;&lt;p&gt;&lt;strong&gt;ಇಂದು ಸಿಲಿಂಡರ್ ದರ&zwnj; ಏರಿಕೆ ವಿರೋಧಿಸಿ ಪ್ರತಿಭಟನೆ&lt;/strong&gt;&lt;/p&gt;&lt;p&gt;ಗದಗ: \Bಸಿಲಿಂಡರ್ ದರ&zwnj; ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್&zwnj; ಸಮಿತಿ ವತಿಯಿಂದ ಮಾ. 12ರಂದು ಸಂಜೆ 4ಕ್ಕೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.&lt;/p&gt;&lt;p&gt;ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಪ್ರತಿಭಟನೆ ನೇತೃತ್ವ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/conditional-bail-granted-to-mla-dr-chandru-lamani-who-was-caught-in-lokayukta-trap/articleshow-y13ohw9"/>
        </item>
        <item>
            <title><![CDATA[ಬೆಲೆ ಏರಿಕೆ ನಡುವೆಯೂ ಗದಗ ಜಿಲ್ಲೆಯಲ್ಲಿ ಬರೋಬ್ಬರಿ ₹340 ಕೋಟಿ ಮೊತ್ತದ ಮದ್ಯ ಬಿಕರಿ]]></title>
            <link>https://kannada.asianetnews.com/karnataka-districts/despite-price-hike-liquor-worth-rs-340-crore-sold-in-gadag-district-mrq/articleshow-zszhg1t</link>
            <guid isPermaLink="true">https://kannada.asianetnews.com/karnataka-districts/despite-price-hike-liquor-worth-rs-340-crore-sold-in-gadag-district-mrq/articleshow-zszhg1t</guid>
            <pubDate>Tue, 24 Mar 2026 05:40:06 +0530</pubDate>
            <description><![CDATA[&lt;p&gt;2025-26ನೇ ಆರ್ಥಿಕ ವರ್ಷದಲ್ಲಿ, ಸರ್ಕಾರದ ಬೆಲೆ ಏರಿಕೆಯ ಹೊರತಾಗಿಯೂ ಗದಗ ಜಿಲ್ಲೆಯಲ್ಲಿ ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹವಾಗಿದೆ. ಲಿಕ್ಕರ್ ಮಾರಾಟದ ಪ್ರಮಾಣ ಸ್ವಲ್ಪ ಕುಸಿದರೂ ಆದಾಯದಲ್ಲಿ ₹35 ಕೋಟಿ ಹೆಚ್ಚಳವಾಗಿದ್ದರೆ, ಬಿಯರ್ ಮಾರಾಟ ಮತ್ತು ಆದಾಯ ಎರಡರಲ್ಲೂ ಕುಸಿತ ಕಂಡುಬಂದಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kdvmsxf25phepk7k0rwc66ts,imgname-liquor-sales-1767233091042.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಕುಮಾರ ಕುಷ್ಟಗಿ&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ಸರ್ಕಾರದ ಪ್ರಮುಖ ಆದಾಯದ ಮೂಲವಾದ ಅಬಕಾರಿ ಇಲಾಖೆಯಲ್ಲಿ 2025- 26ನೇ ಆರ್ಥಿಕ ವರ್ಷದಲ್ಲಿ ದಾಖಲೆ ಪ್ರಮಾಣದ ಮದ್ಯ ವಹಿವಾಟು ನಡೆದಿದ್ದು, ಶಾಶ್ವತ ಬರಪೀಡಿತ ಜಿಲ್ಲೆಯಿಂದಲೇ ಸುಮಾರು ₹400 ಕೋಟಿ ಮದ್ಯ ಮಾರಾಟವಾಗಿದೆ.&lt;/p&gt;&lt;p&gt;2025ರ ಏಪ್ರಿಲ್&zwnj;ನಿಂದ ಅನೇಕ ಮದ್ಯಗಳ ಮತ್ತು ಬಿಯರ್&zwnj;ಗಳ ಬೆಲೆಯನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದ್ದರೂ ಜಿಲ್ಲೆಯ ಮದ್ಯಪ್ರಿಯರು ಮಾತ್ರ ಇದ್ಯಾವುದಕ್ಕೂ ತಲೆಬಿಸಿ ಮಾಡಿಕೊಳ್ಳದೇ ಹೆಚ್ಚೆಚ್ಚು ಖರೀದಿ ಮಾಡಿದ ಹಿನ್ನೆಲೆ 2024- 25ನೇ ಸಾಲಿಗಿಂತ 2025- 26ನೇ ಸಾಲಿನಲ್ಲಿ ಲಿಕ್ಕರ್ ಮತ್ತು ಬಿಯರ್ (ಬಾಕ್ಸ್&zwnj;ಗಳ ಲೆಕ್ಕದಲ್ಲಿ) ಮಾರಾಟದಲ್ಲಿ ಸ್ವಲ್ಪ ಕುಸಿತ ಕಂಡಿದ್ದರೂ ಬೆಲೆಗಳಲ್ಲಿ ಭಾರಿ ಏರಿಕೆಯಿಂದಾಗಿ ಅಬಕಾರಿ ಆದಾಯ ಅಧಿಕವಾಗಿದೆ.&lt;/p&gt;&lt;h2&gt;&lt;strong&gt;ಮಾರಾಟ ವಿವರ&lt;/strong&gt;&lt;/h2&gt;&lt;p&gt;B2024- 25ನೇ ಸಾಲಿನಲ್ಲಿ ಐಎಂಎಲ್ (ಇಂಡಿಯನ್ ಮೇಡ್ ಲಿಕ್ಕರ್) 8.40 ಲಕ್ಷ ಬಾಕ್ಸ್ ಮಾರಾಟದಿಂದ ₹306.34 ಕೋಟಿ ವ್ಯವಹಾರ ನಡೆದಿತ್ತು. 2025- 26ನೇ ಸಾಲಿನಲ್ಲಿ ಬೆಲೆ ಏರಿಕೆ ಹಾಗೂ ನಾನಾ ಕಾರಣದಿಂದ 8.35 ಲಕ್ಷ ಬಾಕ್ಸ್ (ಕಳೆದ ಬಾರಿಗಿಂತ 5 ಲಕ್ಷ ಕಡಿಮೆ) ಮಾರಾಟವಾಗಿದೆ. ಆದರೆ, ₹340.54 ಕೋಟಿ ಮೊತ್ತದ ವ್ಯವಹಾರ ದಾಖಲಾಗಿದೆ. ಕಳೆದ ಬಾರಿಗಿಂತ ಲಿಕ್ಕರ್ ಮಾರಾಟದಲ್ಲಿ ₹35 ಕೋಟಿ ಮೊತ್ತದ ವ್ಯವಹಾರ ಅಧಿಕವಾಗಿದೆ.&lt;/p&gt;&lt;h3&gt;&lt;strong&gt;ಬೆಲೆ ಏರಿಕೆ ಬಿಸಿ ಬಿಯರ್&zwnj;ಗೆ&lt;/strong&gt;&lt;/h3&gt;&lt;p&gt;ಬಿಯರ್ ಮಾರಾಟದಲ್ಲಿ ಅಬಕಾರಿ ಇಲಾಖೆ ಕಳೆದ ಬಾರಿಗಿಂತ ಪ್ರಸಕ್ತ ಸಾಲಿನಲ್ಲಿ ₹3 ಕೋಟಿ ಮೊತ್ತದ ಕಡಿಮೆ ಪ್ರಗತಿ ಸಾಧಿಸಿದೆ. ಬಿಯರ್ ದರದಲ್ಲಿ ಸರ್ಕಾರ ಮಾಡಿರುವ ಭಾರಿ ಪ್ರಮಾಣದ ಹೆಚ್ಚಳವೇ ಇದಕ್ಕೆ ಪ್ರಮುಖ ಕಾರಣವಾಗಿದೆ. 2024- 25ನೇ ಸಾಲಿನಲ್ಲಿ 4.09 ಲಕ್ಷ ಬಾಕ್ಸ್ ಮಾರಾಟವಾಗಿ, 50.05 ಕೋಟಿ ಆರ್ಥಿಕ ಸಂಪನ್ಮೂಲ ಹರಿದು ಬಂದಿತ್ತು. 2025- 26ನೇ ಸಾಲಿನಲ್ಲಿ 3.38 ಲಕ್ಷ ಬಾಕ್ಸ್(ಕಳೆದ ಬಾರಿಗಿಂತ 71 ಸಾವಿರ ಬಾಕ್ಸ್ ಕಡಿಮೆ) ಮಾರಾಟವಾಗಿ ₹47.05 ಕೋಟಿ ಮೊತ್ತದ ವಹಿವಾಟು ಬಿಯರ್ ಮಾರಾಟದಿಂದ ನಡೆದಿದೆ.&lt;/p&gt;&lt;p&gt;ಅಲ್ಪ ಕುಸಿತ: ಜಿಲ್ಲೆಯಲ್ಲಿ ಇಲಾಖೆ ನಿಗದಿ ಮಾಡಿದ ಗುರಿ ಸಾಧಿಸಲಾಗಿದೆ. ಮದ್ಯ ಮಾರಾಟದಲ್ಲಿ ಅಲ್ಪ ಕುಸಿತವಾಗಿದೆ. ಆದರೆ ಉತ್ತಮ ಆರ್ಥಿಕ ವಹಿವಾಟು ನಡೆದಿದ್ದು ಸಂಪನ್ಮೂಲವೂ ಹರಿದು ಬಂದಿದೆ ಎಂದು ಅಬಕಾರಿ ಡಿಸಿ ಲಕ್ಷ್ಮಿ ಎನ್. ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಮದ್ಯ ಮಾರಾಟದ ವಿವರ(ಬಾಕ್ಸ್&zwnj;ಗಳ ಲೆಕ್ಕದಲ್ಲಿ)&lt;/strong&gt;&lt;/p&gt;&lt;p&gt;ವಲಯ- 2025- 26 -2024-25&lt;/p&gt;&lt;p&gt;ಗದಗ- &amp;nbsp;293535 -294012&lt;/p&gt;&lt;p&gt;ಮುಂಡರಗಿ -104099- 106798&lt;/p&gt;&lt;p&gt;ನರಗುಂದ -97085- 98484&lt;/p&gt;&lt;p&gt;ರೋಣ -173831- 171667&lt;/p&gt;&lt;p&gt;ಶಿರಹಟ್ಟಿ- 166109 -169667&lt;/p&gt;&lt;p&gt;&lt;strong&gt;ಬಿಯರ್ ಮಾರಾಟ(ಬಾಕ್ಸ್&zwnj;ಗಳಲ್ಲಿ)&lt;/strong&gt;&lt;/p&gt;&lt;p&gt;ವಲಯ -2025-26 - 2024- 25&lt;/p&gt;&lt;p&gt;ಗದಗ- 141172- 170509&lt;/p&gt;&lt;p&gt;ಮುಂಡರಗಿ- 30782-36198&lt;/p&gt;&lt;p&gt;ನರಗುಂದ- 28748- 34537&lt;/p&gt;&lt;p&gt;ರೋಣ-79671- 96839&lt;/p&gt;&lt;p&gt;ಶಿರಹಟ್ಟಿ- 62433- 73635&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/despite-price-hike-liquor-worth-rs-340-crore-sold-in-gadag-district-mrq/articleshow-zszhg1t"/>
        </item>
    </channel>
</rss>
