<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 16:28:13 +0530</lastBuildDate>
        <atom:link href="https://kannada.asianetnews.com/rss/gadag" rel="self" type="application/rss+xml"/>
        <item>
            <title><![CDATA[ಲಕ್ಕುಂಡಿ:  ಮನೆ ಅಡಿಪಾಯ ತೋಡುವಾಗ ಪುರಾತನ ನಿಧಿ ಪತ್ತೆ!  101 ದೇವಸ್ಥಾನಗಳ ಊರಲ್ಲಿದೆಯೇ ಚಿನ್ನದ ಗಣಿ?]]></title>
            <link>https://kannada.asianetnews.com/state/treasure-found-in-lakkundi-gadag-gold-discovered-while-digging-house-foundation/articleshow-gmdb59g</link>
            <guid isPermaLink="true">https://kannada.asianetnews.com/state/treasure-found-in-lakkundi-gadag-gold-discovered-while-digging-house-foundation/articleshow-gmdb59g</guid>
            <pubDate>Sat, 10 Jan 2026 17:53:48 +0530</pubDate>
            <description><![CDATA[ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ, ಹಳೆಯ ಮನೆಯ ಅಡಿಪಾಯ ತೋಡುವಾಗ ಪುರಾತನ ಚಿನ್ನಾಭರಣಗಳಿದ್ದ ನಿಧಿ ಪತ್ತೆಯಾಗಿದೆ. ಈ ಆಭರಣಗಳು ಸಮೀಪದ ಲಕ್ಷ್ಮೀ ದೇವಸ್ಥಾನಕ್ಕೆ ಸೇರಿದ್ದೆಂದು ಶಂಕಿಸಲಾಗಿದ್ದು, ಕಲ್ಯಾಣ ಚಾಲುಕ್ಯರ ಕಾಲದ ಇತಿಹಾಸಕ್ಕೆ ಹೊಸ ಸೇರ್ಪಡೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kekxgxpqta76kknd1rc32s5x,imgname-----------------------2026-01-10t173037.558-1768047539927.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಲಕ್ಕುಂಡಿ (ಜ.10):&lt;/strong&gt; ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಅಚ್ಚರಿ ಘಟನೆಯೊಂದು ನಡೆದಿದೆ. ಹಳೆಯ ಮನೆಯ ಅಡಿಪಾಯ ತೋಡುವಾಗ ಅಪಾರ ಪ್ರಮಾಣದ ಪುರಾತನ ನಿಧಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸಂಚಲನ ಮೂಡಿಸಿದೆ.&lt;/p&gt;&lt;h2&gt;ಮನೆ ಅಡಿಪಾಯ ತೋಡುವಾಗ ಸಿಕ್ಕಿತು ನಿಧಿ!&lt;/h2&gt;&lt;p&gt;ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕಸ್ತೂರೆವ್ವ ರಿತ್ತಿ ಎನ್ನುವವರ ಮನೆಯಲ್ಲಿ ಈ ವಿಸ್ಮಯ ನಡೆದಿದೆ. ಹೊಸ ಮನೆ ನಿರ್ಮಾಣಕ್ಕಾಗಿ ಹಳೆಯ ಅಡಿಪಾಯವನ್ನು ತೋಡುತ್ತಿದ್ದಾಗ ಕಾರ್ಮಿಕರಿಗೆ ಲೋಹದ ಚೆಂಬು ಪತ್ತೆಯಾಗಿದೆ. ಕುತೂಹಲದಿಂದ ಆ ಚೆಂಬನ್ನು ಪರೀಕ್ಷಿಸಿದಾಗ ಅದರ ಒಳಗೆ ಪಳಪಳ ಹೊಳೆಯುವ ಚಿನ್ನಾಭರಣಗಳು ಕಂಡುಬಂದಿವೆ.&lt;/p&gt;&lt;h3&gt;ಚೆಂಬಿನಲ್ಲಿ ಏನೇನು ಅಭರಣಗಳಿವೆ?&lt;/h3&gt;&lt;p&gt;ಪತ್ತೆಯಾದ ಪುರಾತನ ಚೆಂಬಿನಲ್ಲಿ ಚಿನ್ನದ ಚೈನ್, ಬೆಲೆಬಾಳುವ ಬಳೆಗಳು ಹಾಗೂ ವಿವಿಧ ವಿನ್ಯಾಸದ ಉಂಗುರಗಳು ಪತ್ತೆಯಾಗಿವೆ. ವಿಶೇಷವೆಂದರೆ, ನಿಧಿ ಸಿಕ್ಕ ಮನೆಯ ಪಕ್ಕದಲ್ಲೇ ಪುರಾತನ ಲಕ್ಷ್ಮೀ ದೇವಸ್ಥಾನವಿದೆ. ಈ ಹಿನ್ನೆಲೆಯಲ್ಲಿ, ಸಿಕ್ಕಿರುವ ಚಿನ್ನಾಭರಣಗಳು ದೇವಸ್ಥಾನಕ್ಕೆ ಸೇರಿದ ಪುರಾತನ ಒಡವೆಗಳಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಕಲ್ಯಾಣ ಚಾಲುಕ್ಯರ ಕಾಲದ ಇತಿಹಾಸ ಹೊಂದಿರುವ ಈ ಮಣ್ಣಿನಲ್ಲಿ ಮತ್ತೆ ನಿಧಿ ಪತ್ತೆಯಾಗಿರುವುದು ಕುತೂಹಲ ಕೆರಳಿಸಿದೆ.&lt;/p&gt;&lt;p&gt;&lt;strong&gt;ಅಧಿಕಾರಿಗಳ ಭೇಟಿ ಚಿನ್ನಾಭರಣ ತಪಾಸಣೆ&lt;/strong&gt;&lt;/p&gt;&lt;p&gt;ನಿಧಿ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾದ ಆಭರಣಗಳ ಕಾಲಮಾನ ಮತ್ತು ಅವುಗಳ ಮೌಲ್ಯದ ಬಗ್ಗೆ ಸಂಶೋಧನೆ ನಡೆಸಲು ಮುಂದಾಗಿದ್ದಾರೆ. ಜಿಲ್ಲಾಡಳಿತವು ಸ್ಥಳವನ್ನು ವಶಕ್ಕೆ ಪಡೆದು, ಹೆಚ್ಚಿನ ಉತ್ಖನನ ನಡೆಸುವ ಸಾಧ್ಯತೆಯೂ ಇದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;&lt;strong&gt;ಶಿಲ್ಪಕಲೆಯ ತೊಟ್ಟಿಲು ಲಕ್ಕುಂಡಿ ಗ್ರಾಮ&lt;/strong&gt;&lt;/p&gt;&lt;p&gt;ಲಕ್ಕುಂಡಿ ಗ್ರಾಮವು 11 ಮತ್ತು 12ನೇ ಶತಮಾನದ ದೇವಸ್ಥಾನಗಳಿಗೆ ಹೆಸರುವಾಸಿಯಾಗಿದೆ. 101 ದೇವಸ್ಥಾನ ಹಾಗೂ 101 ಬಾವಿಗಳನ್ನು ಹೊಂದಿರುವ ಈ ಗ್ರಾಮವು 'ಶಿಲ್ಪಕಲೆಯ ತೊಟ್ಟಿಲು' ಎಂದೇ ಪ್ರಖ್ಯಾತಿ ಪಡೆದಿದೆ. ಕಲ್ಯಾಣ ಚಾಲುಕ್ಯರ ಕಾಲದ ವೈಭವಕ್ಕೆ ಈ ಗ್ರಾಮ ಸಾಕ್ಷಿಯಾಗಿದ್ದು, ಆಗಾಗ ಇಂತಹ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇಂದು ಪತ್ತೆಯಾದ ನಿಧಿಯು ಆ ಕಾಲದ ಆರ್ಥಿಕ ಸಮೃದ್ಧಿಯನ್ನು ನೆನಪಿಸುವಂತಿದೆ.&lt;/p&gt;]]></content:encoded>
            <category>gadag</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/treasure-found-in-lakkundi-gadag-gold-discovered-while-digging-house-foundation/articleshow-gmdb59g"/>
        </item>
        <item>
            <title><![CDATA[ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್‌ಗೆ ಡಿಮ್ಯಾಂಡ್]]></title>
            <link>https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f</link>
            <guid isPermaLink="true">https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f</guid>
            <pubDate>Sun, 24 May 2026 16:02:36 +0530</pubDate>
            <description><![CDATA[&lt;p&gt;ಹುಬ್ಬಳ್ಳಿಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕರ ಸಭೆಯಲ್ಲಿ, ರಾಜ್ಯಸಭಾ ಸಂಸದ ನಾರಾಯಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ರೈಲು ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಹೊಸ ವಂದೇ ಭಾರತ್, ಬಾಗಲಕೋಟೆ-ಕುಡಚಿ ಮಾರ್ಗ, ಮತ್ತು ವಿಜಯಪುರ-ತಿರುಪತಿ ರೈಲು ಸೇರಿದಂತೆ ಹಲವು ಯೋಜನೆಗಳ ಕುರಿತು ಚರ್ಚಿಸಲಾಗಿದ್ದು, ಈ ಯೋಜನೆಗಳು ಪ್ರಾದೇಶಿಕ ಸಂಪರ್ಕ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk9bp62qv9cthntcjy9jaten,imgname-chittur-railway-station-1773062002775.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಕುರಿತು ಮಹತ್ವದ ಸಭೆಯು ಹುಬ್ಬಳ್ಳಿಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕರೊಂದಿಗೆ ಶುಕ್ರವಾರ ನಡೆಯಿತು.&lt;/p&gt;&lt;p&gt;ಹುಬ್ಬಳ್ಳಿಯಲ್ಲಿ ಮಹಾ ವ್ಯವಸ್ಥಾಪಕ ಪಿ.ಅನಂತ್ ಅವರೊಂದಿಗೆ ಉತ್ತರ ಕರ್ನಾಟಕದ ರೈಲು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ ರೈಲು ಸೇವೆಗಳ ವಿಸ್ತರಣೆ ಕುರಿತು ಮಹತ್ವದ ಚರ್ಚೆ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯ ಇಂಜಿನಿಯರ್ ಹಾಗೂ ಹೆಚ್ಚುವರಿ ಮುಖ್ಯ ಎಂಜಿನಿಯರ್ ಉಪಸ್ಥಿತರಿದ್ದರು. ರಾಜ್ಯಸಭಾ ಸಂಸದರಾದ ನಾರಾಯಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಪ್ರಮುಖ ರೈಲು ಯೋಜನೆಗಳು ಮತ್ತು ಸಾರ್ವಜನಿಕ ಬೇಡಿಕೆಗಳಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಮಂಡಿಸಿದರು.&lt;/p&gt;&lt;h2&gt;ಹಲವು ರೈಲುಗಳ ವೆಚ್ಚ&lt;/h2&gt;&lt;p&gt;ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದು, ಗದಗ-ಮುಂಬೈ ನಡುವೆ ಬಾಗಲಕೋಟೆ-ಸೊಲ್ಲಾಪುರ ಮಾರ್ಗವಾಗಿ ಹೊಸ ವಂದೇ ಭಾರತ್ ಎಕ್ಸಪ್ರೆಸ್&zwnj; ಆರಂಭಿಸುವುದು, ವಿಜಯಪುರ-ತಿರುಪತಿ ನೇರ ರೈಲು ಸೇವೆ ಆರಂಭಿಸುವ ಕುರಿತು, ಗೋಲ್ ಗುಂಬಜ್ ಎಕ್ಸ್ಪ್ರೆಸ್ (16535/16536) ರೈಲಿನ ವೇಗ ಹೆಚ್ಚಿಸುವುದು, ಸವದತ್ತಿ ಮಾರ್ಗವಾಗಿ ಲೋಕಾಪುರ-ಧಾರವಾಡ ಹೊಸ ರೈಲು ಮಾರ್ಗ ನಿರ್ಮಾಣ, ಹುಬ್ಬಳ್ಳಿ-ಹಜ್ರತ್ ನಿಜಾಮುದ್ದೀನ್ ಎಕ್ಸಪ್ರೆಸ್&zwnj; (20647) ಸೇವೆಯನ್ನು ವಾರಕ್ಕೆ ಎರಡು ಬಾರಿ ವಿಸ್ತರಿಸುವುದು, ಬಸವ ಎಕ್ಸಪ್ರೆಸ್&zwnj; ರೈಲನ್ನು ಲೋಕಾಪುರವರೆಗೆ ವಿಸ್ತರಿಸುವುದು, ಬಾಗಲಕೋಟೆ ರೈಲು ನಿಲ್ದಾಣದ ಪ್ಲಾಟ್&zwnj; ಫಾರ್ಮ್&zwnj; ಸಂಖ್ಯೆ 2 ಮತ್ತು 3ರಲ್ಲಿ ಲಿಫ್ಟ್ ಅಳವಡಿಸುವ ಕುರಿತು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಅವರು ಮಾತನಾಡಿದರು.&lt;/p&gt;&lt;h2&gt;ಪ್ರಯಾಣಿಕರ ಸೌಲಭ್ಯ ವೃದ್ಧಿಗೆ ಮಹತ್ವದ ಪಾತ್ರ&lt;/h2&gt;&lt;p&gt;ಈ ಯೋಜನೆಗಳು ಉತ್ತರ ಕರ್ನಾಟಕದ ಪ್ರಾದೇಶಿಕ ಸಂಪರ್ಕ, ಆರ್ಥಿಕ ಬೆಳವಣಿಗೆ, ಕೈಗಾರಿಕೆ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಲಭ್ಯ ವೃದ್ಧಿಗೆ ಮಹತ್ವದ ಪಾತ್ರ ವಹಿಸಲಿವೆ ಎಂದು ತಿಳಿಸಿದರು. ದಕ್ಷಿಣ ಪಶ್ಚಿಮ ರೈಲ್ವೆ ಮಹಾ ವ್ಯವಸ್ಥಾಪಕ ಪಿ. ಅನಂತ್ ಅವರು ಮಂಡಿಸಲಾದ ಪ್ರಸ್ತಾವನೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/north-karnataka-railway-upgrades-and-gadag-mumbai-vande-bharat-proposed-gdp/articleshow-01rx96f"/>
        </item>
        <item>
            <title><![CDATA[ಕಾಂಗ್ರೆಸ್‌ಗೆ ದೇಶಕ್ಕಿಂತ ಗಾಂಧಿ ಕುಟುಂಬ ಮುಖ್ಯ: ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ]]></title>
            <link>https://kannada.asianetnews.com/karnataka-districts/b-sriramulu-slams-congress-over-modi-austerity-remarks-gvd/articleshow-1zx9e2g</link>
            <guid isPermaLink="true">https://kannada.asianetnews.com/karnataka-districts/b-sriramulu-slams-congress-over-modi-austerity-remarks-gvd/articleshow-1zx9e2g</guid>
            <pubDate>Mon, 18 May 2026 17:32:19 +0530</pubDate>
            <description><![CDATA[&lt;p&gt;ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶಕ್ಕಿಂತ ಗಾಂಧಿ ಕುಟುಂಬಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮಿತವ್ಯಯದ ಕರೆ ಕುರಿತೂ ಪ್ರತಿಕ್ರಿಯೆ ನೀಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ggmxkr9kf1gwar935ntze9pj,imgname-b-sriramulu.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮೇ.18): &lt;/strong&gt;ಕಾಂಗ್ರೆಸಿಗರು ಎಲ್ಲವನ್ನೂ ವಿರೋಧಿಸುವ ಚಾಳಿ ಮುಂದುವರಿಸಿದ್ದು, ದೇಶದ ಅಭಿವೃದ್ಧಿ ಹಾಗೂ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ನೀಡುವ ವಿನಂತಿಯನ್ನು ಟೀಕಿಸುತ್ತಾರೆ. ಕಾಂಗ್ರೆಸಿಗರು ದಪ್ಪ ಚರ್ಮದ ನಾಯಕರಾಗಿದ್ದು, ಅವರಿಗೆ ದೇಶಕ್ಕಿಂತ ಗಾಂಧಿ ಕುಟುಂಬವೇ ಮುಖ್ಯವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.&lt;/p&gt;&lt;p&gt;ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರ ನಡೆ ಹುಚ್ಚರ ಕೈಗೆ ತೆಂಗಿನಕಾಯಿ ಕೊಟ್ಟಂತೆ ಆಗಿದೆ. ದೇಶದ ಭವಿಷ್ಯದ ಆರ್ಥಿಕತೆಯ ಹಿತದೃಷ್ಟಿಯಿಂದ ಚಿನ್ನದ ಖರೀದಿಯನ್ನು ಕೆಲ ದಿನಗಳ ಮಟ್ಟಿಗೆ ಕಡಿಮೆ ಮಾಡಬೇಕು ಮತ್ತು ಪೆಟ್ರೋಲ್, ಡೀಸೆಲ್ ಅನ್ನು ಮಿತವಾಗಿ ಬಳಸಬೇಕು ಎಂದು ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ.&lt;/p&gt;&lt;p&gt;ಪ್ರಧಾನಿಯವರು ಕೇವಲ ಉಪದೇಶ ಮಾಡದೆ, ಅದನ್ನು ತಾವೂ ಪಾಲಿಸುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಂತ ಹೆಚ್ಚು ಭದ್ರತಾ ರಿಸ್ಕ್ ಹೊಂದಿರುವ ಪ್ರಧಾನಿ ಮೋದಿ ಅವರು, ತಮಗಿರುವ ಜೆಡ್ ಪ್ಲಸ್ ಸೆಕ್ಯುರಿಟಿಯ ಅಬ್ಬರವನ್ನು ಬದಿಗಿಟ್ಟು ಕೇವಲ ಒಂದೇ ವಾಹನವನ್ನು ಬಳಸುವ ಮೂಲಕ ಸರಳತೆ ಮೆರೆಯುತ್ತಿದ್ದಾರೆ.&lt;/p&gt;&lt;p&gt;ಇತ್ತ ಪ್ರಧಾನಿ ಮೋದಿ ಅವರ ಮಿತವ್ಯಯದ ಹೇಳಿಕೆಯನ್ನು ವ್ಯಂಗ್ಯವಾಡುತ್ತಿರುವ ಕಾಂಗ್ರೆಸ್ ನಾಯಕರು ಏನು ಮಾಡುತ್ತಿದ್ದಾರೆ? ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಅವರ ಯಾವ ಮಾತನ್ನು ಪಾಲನೆ ಮಾಡುತ್ತಿದ್ದಾರೆ? ನಿಮ್ಮ ಹಿಂದೆ ಮುಂದೆ ಎಷ್ಟು ವಾಹನಗಳು ಓಡಾಡುತ್ತಿವೆ ಎನ್ನುವುದನ್ನು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಇಂದಿರಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರೂ ಇಂತಹದೇ ಮಿತವ್ಯಯದ ಕರೆಗಳನ್ನು ನೀಡಿದ್ದರು ಎನ್ನುವುದನ್ನು ಕಾಂಗ್ರೆಸ್ ನಾಯಕರು ಮರೆತಿದ್ದಾರೆ ಎಂದರು.&lt;/p&gt;&lt;h2&gt;&lt;strong&gt;ಕೇವಲ ನಾಟಕ&lt;/strong&gt;&lt;/h2&gt;&lt;p&gt;ಇತ್ತೀಚೆಗೆ ಇಂಧನ ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಸೈಕಲ್ ಸವಾರಿ ಮಾಡಿದ್ದನ್ನು ಕಾಂಗ್ರೆಸಿಗರು ವ್ಯಂಗ್ಯವಾಡಿರುವ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮುಲು, ಜನಸಾಮಾನ್ಯರ ಪರವಾಗಿ ಹೋರಾಡುವವರನ್ನು ಟೀಕಿಸುವ ಕಾಂಗ್ರೆಸ್ ನಾಯಕರಿಗೆ ಕೇವಲ ನಾಟಕ ಆಡಿ ರಾಜ್ಯ ಆಳಬೇಕು ಎನ್ನುವ ಮನೋಭಾವವಿದೆ. ಕೋವಿಡ್ ಸಮಯದಲ್ಲಿ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಸುಳ್ಳು ಆರೋಪ ಹೊರಿಸಿದ ಇವರು, ಎಲ್ಲರನ್ನೂ ಟೀಕಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.&lt;/p&gt;&lt;p&gt;ಕಾಂಗ್ರೆಸ್ ಒಳಗಿನ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್&zwnj;ನ ನಡವಳಿಕೆ ಮತ್ತು ಧೋರಣೆಗಳು ಸರಿಯಿಲ್ಲದ ಕಾರಣಕ್ಕಾಗಿಯೇ ಆ ಪಕ್ಷದ ಹಿರಿಯ ನಾಯಕರೆಲ್ಲರೂ ಸದ್ಯ ಪಕ್ಷವನ್ನು ತೊರೆದು ಹೊರಬರುತ್ತಿದ್ದಾರೆ. ದೇಶದ ಹಿತವನ್ನು ಬಲಿಕೊಟ್ಟು ಕೇವಲ ಒಂದು ಕುಟುಂಬದ ಹಿತ ಕಾಯುವ ಪಕ್ಷಕ್ಕೆ ಭವಿಷ್ಯವಿಲ್ಲ ಎಂದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/b-sriramulu-slams-congress-over-modi-austerity-remarks-gvd/articleshow-1zx9e2g"/>
        </item>
        <item>
            <title><![CDATA[Gadag: ಅಪಾಯದಂಚಿನ ಮಾರ್ಗ: ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ]]></title>
            <link>https://kannada.asianetnews.com/karnataka-districts/gadag-hole-alur-amaragol-road-deteriorated-severely-1-km-of-the-road-is-at-point-of-cracking-collapsing-fear-mrq/articleshow-3sfkdwc</link>
            <guid isPermaLink="true">https://kannada.asianetnews.com/karnataka-districts/gadag-hole-alur-amaragol-road-deteriorated-severely-1-km-of-the-road-is-at-point-of-cracking-collapsing-fear-mrq/articleshow-3sfkdwc</guid>
            <pubDate>Sat, 30 May 2026 08:02:28 +0530</pubDate>
            <description><![CDATA[2019ರಿಂದ ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹದಿಂದಾಗಿ ಹೊಳೆಆಲೂರು-ಅಮರಗೋಳ ಸಂಪರ್ಕ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಸುಮಾರು 1 ಕಿ.ಮೀ ರಸ್ತೆಯು ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಜೀವ ಭಯದಿಂದ ಸಂಚರಿಸುವಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ತಡೆಗೋಡೆ ಅಥವಾ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksvbf9vwqw3n21hcga61mxb0,imgname-road--1--1780108207996.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಂಜೀವಕುಮಾರ ಹಿರೇಮಠ&lt;/strong&gt;&lt;/p&gt;&lt;p&gt;&lt;strong&gt;ಕನ್ನಡಪ್ರಭ ವಾರ್ತೆ ಹೊಳೆಆಲೂರು: &amp;nbsp;&lt;/strong&gt;2019ರಿಂದ ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹಕ್ಕೆ ಪ್ರತಿವರ್ಷ ರಸ್ತೆಗಳು ಸಂಪೂರ್ಣ ಹಾಳಾಗುತ್ತಾ ಬರುತ್ತಿದ್ದು, ಅಮರಗೋಳದ 1 ಕಿಮೀ ರಸ್ತೆ ಬಿರುಕು ಬಿಟ್ಟು ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುವ ಪರಿಸ್ಥಿತಿ ಎದುರಾಗಿದೆ.&lt;/p&gt;&lt;p&gt;ಹೊಳೆಆಲೂರಿನಿಂದ ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಹೊಳೆಆಲೂರು ಹಾಗೂ ಅಮರಗೋಳ ನಡುವೆ 1 ಕಿಮೀ ರಸ್ತೆ ಪಕ್ಕ ಮಲಪ್ರಭಾ ನದಿ ನೀರು ಹರಿಯುತ್ತಿದ್ದು, 2019ರಿಂದ 3- 4 ಬಾರಿ ತಡೆ ಕಟ್ಟಿ ಮಣ್ಣು ಹಾಕಿದರೂ ಪ್ರಯೋಜನವಾಗಿಲ್ಲ. ಅರ್ಧ ರಸ್ತೆ ಮಾತ್ರ ಉಳಿದುಕೊಂಡಿದ್ದು, ಪ್ರಯಾಣಿಕರಿಗೆ ಜೀವ ಕಂಟಕವಾಗಿದೆ.&lt;/p&gt;&lt;p&gt;ಈಗ ದೊಡ್ಡ ಸೇತುವೆ ಆಗಿದೆ ಸರಿ, ಮೊದಲು ಸಣ್ಣ ಸೇತುವೆ ಇದ್ದ ಸಂದರ್ಭದಲ್ಲಿ ಮುಳುಗಡೆ ಆದರೆ 10ರಿಂದ 15 ಕಿಮೀ ವ್ಯತ್ಯಾಸವಾಗಬಹುದು ಅಷ್ಟೇ. ಬಿಟ್ಟರೆ ಹೊಳೆಆಲೂರಿನಿಂದ ರೈತರಿಗೆ ಬೇಲೂರು(ಜಾಲಿಹಾಳ) ಸಂತೆಗೆ, ನೈನಾಪುರ, ಮಣ್ಣೀರಿ, ಬಾದಾಮಿ ತಾಲೂಕಿನ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ.&lt;/p&gt;&lt;p&gt;ಈ ಮಾರ್ಗದಲ್ಲಿ ಬರುವ ಗ್ರಾಮಗಳಿಗೆ ಬಸ್ ಸಂಚಾರ ಇಲ್ಲ. ಒಂದು ಆಟೋ ಹೋಗುವಷ್ಟು ಮಾತ್ರ ರಸ್ತೆ ಉಳಿದಿದ್ದು, ಅದು ರಸ್ತೆ ಬುಡದ ಮಣ್ಣು ಹಸಿಯಾಗಿದ್ದು, ಟಾರು ರಸ್ತೆ ಸಹ ಬಿರುಕು ಬಿಡುತ್ತಿದೆ. ಪ್ರಯಾಣಿಕರು ತುಂಬಿದ ವಾಹನ, ವಸ್ತುಗಳು ಲೋಡ್ ಆದ ವಾಹನದ ಚಾಲಕರು, ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುವ ಸ್ಥಿತಿ ಇದೆ. ಮಲಪ್ರಭಾ ನದಿ ಸ್ವಲ್ಪ ಏರಿಕೆಯಾಗಿ ಬಂದರೂ ಇಲ್ಲಿಯ ರಸ್ತೆ ಸಂಪೂರ್ಣ ಕುಸಿದು ಬಿದ್ದು, ನದಿ ಸೇರುವ ಸ್ಥಿತಿಯಲ್ಲಿದೆ.&lt;/p&gt;&lt;h2&gt;&lt;strong&gt;ವಿದ್ಯಾರ್ಥಿಗಳಿಗೆ ಸಮಸ್ಯೆ&lt;/strong&gt;&lt;/h2&gt;&lt;p&gt;ಹೊಳೆಆಲೂರಿಗೆ ಶಿಕ್ಷಣಕ್ಕೆ ಎಲ್ಕೆಜಿಯಿಂದ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ, ಡಿಪ್ಲೊಮಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಪಾಡು ನೋಡುವಂತಿಲ್ಲ. ಬಸ್ ವ್ಯವಸ್ಥೆ ಇಲ್ಲದೆ, ಗ್ರಾಮಗಳಲ್ಲಿ ಆಟೋ ಹಿಡಿದು ಬರಬೇಕು. ಇಲ್ಲವಾದರೆ ನಡೆದು ಬರಬೇಕು. ಆಟೋಗಳಲ್ಲಿ ಬಂದ ವಿದ್ಯಾರ್ಥಿಗಳು 1 ಕಿಮೀ ರಸ್ತೆಯಲ್ಲಿ ಭಯದಿಂದ ಸಂಚರಿಸಬೇಕಿದೆ.&lt;/p&gt;&lt;h3&gt;&lt;strong&gt;ಶಾಶ್ವತ ಪರಿಹಾರ ಅವಶ್ಯ:&lt;/strong&gt;&lt;/h3&gt;&lt;p&gt;2019ರಿಂದ ಇಲ್ಲಿಯವರೆಗೆ 3- 4 ಬಾರಿ ಕಿತ್ತ ರಸ್ತೆ ಹಾಗೆ 3- 4 ಬಾರಿ ಮಣ್ಣು ಹಾಕಲಾಗಿದೆ. ಆದರೂ ರಸ್ತೆ ಕೊರೆತ ಹೆಚ್ಚಾಗಿದ್ದು, ನಾಲ್ಕೈದು ಗ್ರಾಮಗಳ ಜನರು, ವಿದ್ಯಾರ್ಥಿಗಳು, ರೈತರ ಪಾಡು ಹೇಳಲಾಗದು. ಅದೇ ಪರಿಸ್ಥಿತಿ ನಡುವೆಯೇ ಪ್ರಯಾಣಿಸುತ್ತಾರೆ. ಆದ್ದರಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರ ವ್ಯವಸ್ಥಿತ ಕಾಮಗಾರಿ ಕೈಗೊಂಡು ಸುರಕ್ಷಿತ ಸೇತುವೆ ಇಲ್ಲವೇ ತಡೆಗೋಡೆ ನಿರ್ಮಾಣ ಮಾಡಬೇಕಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಕುಷ್ಟಗಿಯವರೆಗೆ ವಿಸ್ತರಿಸಲು ಹೆಚ್ಚಿದ ಒತ್ತಾಯ, ಪ್ರಯೋಜನವೇನು?&lt;/strong&gt;&lt;/p&gt;&lt;p&gt;ಸುರಕ್ಷಿತ ಸೇತುವೆ ಇಲ್ಲವೇ ತಡೆಗೋಡೆ ನಿರ್ಮಾಣ ಮಾಡಿದರೆ ತುಂಬಾ ಅನುಕೂಲ ಆಗುತ್ತದೆ. ನಾವು ಆಟೋರಿಕ್ಷಾ ಓಡಿಸುತ್ತೇವೆ. ಆದರೆ ಬಸ್, ಟ್ರ್ಯಾಕ್ಟರ್, ರೈತರು ಕಾಳು ಕಡಿ ತುಂಬಿ ಸಂಚರಿಸಿದರೆ ಸಮಸ್ಯೆ ಆಗುತ್ತದೆ. ರಸ್ತೆ ಸಂಪೂರ್ಣ ಹಾಳಾದರೆ ಇಲ್ಲಿಯ ರೈತರಿಗೆ ನದಿಯಿಂದ ತುಂಬಾ ಸಮಸ್ಯೆ ಆಗುತ್ತದೆ. ನದಿಯಲ್ಲಿ ನಿತ್ಯ ಹರಿಯುವ ಸ್ವಲ್ಪ ನೀರು ರೈತರ ಜಮೀನಿನ ಮೇಲೆ ಹರಿಯುತ್ತದೆ ಎಂದು ಸ್ಥಳೀಯ ಆಟೋ ಚಾಲಕರು ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್&zwnj;ಗೆ ಡಿಮ್ಯಾಂಡ್&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-hole-alur-amaragol-road-deteriorated-severely-1-km-of-the-road-is-at-point-of-cracking-collapsing-fear-mrq/articleshow-3sfkdwc"/>
        </item>
        <item>
            <title><![CDATA[ಲಕ್ಕುಂಡಿ ಮಣ್ಣಲ್ಲಿ ಅಡಗಿದ್ದ ಚಾಲುಕ್ಯರ ರಹಸ್ಯ ಪತ್ತೆ! 13 ಸಾಲುಗಳಲ್ಲಿ ಕನ್ನಡ ಶಾಸನ, ಜಗದೇಕಮಲ್ಲನ ಆಳ್ವಿಕೆ ಉಲ್ಲೇಖ]]></title>
            <link>https://kannada.asianetnews.com/karnataka-districts/12th-century-kalyana-chalukya-jagadekamalla-inscription-found-in-lakkundi-gdp/articleshow-66yqrmh</link>
            <guid isPermaLink="true">https://kannada.asianetnews.com/karnataka-districts/12th-century-kalyana-chalukya-jagadekamalla-inscription-found-in-lakkundi-gdp/articleshow-66yqrmh</guid>
            <pubDate>Tue, 26 May 2026 14:14:28 +0530</pubDate>
            <description><![CDATA[ಗದಗದ ಐತಿಹಾಸಿಕ ತಾಣ ಲಕ್ಕುಂಡಿಯಲ್ಲಿ ಕಲ್ಯಾಣ ಚಾಲುಕ್ಯರ ಕಾಲದ, 2ನೇ ಜಗದೇಕಮಲ್ಲನ ಆಳ್ವಿಕೆಯನ್ನು ಉಲ್ಲೇಖಿಸುವ ಹೊಸ ತುಂಡು ಶಾಸನ ಪತ್ತೆಯಾಗಿದೆ. ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವು 12ನೇ ಶತಮಾನದ ಕುಂತಳನಾಡು ಹಾಗೂ ಮಾಸವಾಡಿ ಆಡಳಿತ ಘಟಕಗಳ ಬಗ್ಗೆ ಮಾಹಿತಿ ನೀಡುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kshq7sxn9xw0t06hqpy43j5m,imgname-inscription-found-in-lakkundi--1--1779785000885.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದ ಶಾಸನ ಪತ್ತೆಯಾಗಿದ್ದು, ಇತಿಹಾಸ ಸಂಶೋಧಕರಲ್ಲಿ ಕುತೂಹಲ ಮೂಡಿಸಿದೆ. ಕನ್ನಡ ಭಾಷೆ ಮತ್ತು ಕನ್ನಡ ಲಿಪಿಯಲ್ಲಿರುವ ಈ ತುಂಡು ಶಾಸನವು 13 ಸಾಲುಗಳನ್ನು ಒಳಗೊಂಡಿದ್ದು, ಚಾಲುಕ್ಯ ಚಕ್ರವರ್ತಿ 2ನೇ ಜಗದೇಕಮಲ್ಲನ ಆಳ್ವಿಕೆಯನ್ನು ಉಲ್ಲೇಖಿಸುತ್ತದೆ. ಶಾಸನದಲ್ಲಿ ಕುಂತಳನಾಡು ಹಾಗೂ ಮಾಸವಾಡಿ ಆಡಳಿತ ಘಟಕಗಳ ಕುರಿತು ಪ್ರಸ್ತಾಪವಿದ್ದು, ಜಗದೇಕಮಲ್ಲದೇವನ ಕಾಲದ ಒಬ್ಬ ಮಹಾಮಂಡಳೇಶ್ವರನ ಪ್ರಶಸ್ತಿಯನ್ನು ಹೊಗಳಲಾಗಿದೆ. ಆದರೆ ಶಾಸನದ ಬಹುತೇಕ ಭಾಗ ತುಂಡಾಗಿ ಹಾನಿಗೊಳಗಾಗಿರುವುದರಿಂದ ಹೆಚ್ಚಿನ ವಿವರ ಲಭ್ಯವಾಗಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.&lt;/p&gt;&lt;h2&gt;ಜಗದೇಕಮಲ್ಲನ ಆಳ್ವಿಕೆಯ ಅವಧಿಯೆಂದು ಶಂಕೆ&lt;/h2&gt;&lt;p&gt;ಶಾಸನದ ಆರಂಭದಲ್ಲಿ ಶಿವಸ್ತುತಿ ಇರುವುದರಿಂದ ಇದು ಶಿವಾಲಯಕ್ಕೆ ಭೂದಾನ ನೀಡಿದ ಕುರಿತು ಇರಬಹುದೆಂದು ಅಂದಾಜಿಸಲಾಗಿದೆ. ಶಾಸನದಲ್ಲಿ ಸ್ಪಷ್ಟ ಕಾಲದ ಉಲ್ಲೇಖ ಇಲ್ಲದಿದ್ದರೂ, ಜಗದೇಕಮಲ್ಲನ ಆಳ್ವಿಕೆಯ ಅವಧಿಯಾದ ಕ್ರಿಶ 1139ರಿಂದ 1149ರ ನಡುವಿನ ಕಾಲಘಟ್ಟದಲ್ಲಿ ಇದು ರಚನೆಯಾಗಿರಬಹುದು ಎಂದು ಹೇಳಲಾಗಿದೆ. ಲಿಪಿ ಶೈಲಿಯ ಆಧಾರದ ಮೇಲೂ ಇದನ್ನು 12ನೇ ಶತಮಾನದ ಶಾಸನವೆಂದು ಗುರುತಿಸಲಾಗಿದೆ. ಬಸಪ್ಪ ಮುಸುಕಿನಬಾವಿ ಅವರು ಶಾಸನವನ್ನು ಗುರುತಿಸಿದ್ದು, ಶಾಸನವನ್ನು ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ನಿರ್ದೇಶಕ ಡಾ. ಆರ್. ಶೇಜೇಶ್ವರ ಹಾಗೂ ಶಾಸನ ಸಂಶೋಧಕ ಡಾ. ರವಿಕುಮಾರ ಕೆ. ನವಲಗುಂದ ಅವರು ಅಧ್ಯಯನ ಮಾಡಿ ವಿವರಗಳನ್ನು ನೀಡಿದ್ದಾರೆ ಎಂದು ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದಲಿಂಗೇಶ್ವರ ಪಾಟೀಲ ಹಾಗೂ ಆಯುಕ್ತ ಡಾ. ಶರಣು ಗೋಗೇರಿ ಮಾಹಿತಿ ನೀಡಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/12th-century-kalyana-chalukya-jagadekamalla-inscription-found-in-lakkundi-gdp/articleshow-66yqrmh"/>
        </item>
        <item>
            <title><![CDATA[ಲಕ್ಕುಂಡಿಯ 100 ಗುಡಿ, 100 ಬಾವಿಗಳ ಪತ್ತೆಗಾಗಿ ಉತ್ಖನನ; ಈವರೆಗೆ ಸಿಕ್ಕಿದ್ದೆಷ್ಟು?]]></title>
            <link>https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23</link>
            <guid isPermaLink="true">https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23</guid>
            <pubDate>Sun, 17 May 2026 09:09:32 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 100 ಗುಡಿಗಳು ಮತ್ತು 100 ಬಾವಿಗಳ ಪತ್ತೆಗಾಗಿ ಉತ್ಖನನ ನಡೆಯುತ್ತಿದೆ. ಈವರೆಗೆ 32 ಗುಡಿಗಳು ಮತ್ತು 36 ಬಾವಿಗಳು ಪತ್ತೆಯಾಗಿದ್ದು, ಉಳಿದವುಗಳ ಶೋಧ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಪ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgk50ngn48wtx2v1eenpye8m,imgname-lakkundi-1770169325077.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 100 ಗುಡಿಗಳು ಮತ್ತು 100 ಬಾವಿಗಳ ಪತ್ತೆಗಾಗಿ ಉತ್ಖನನ ನಡೆಯುತ್ತಿದೆ. ಈವರೆಗೆ 32 ಗುಡಿಗಳು ಮತ್ತು 36 ಬಾವಿಗಳು ಪತ್ತೆಯಾಗಿದ್ದು, ಉಳಿದವುಗಳ ಶೋಧ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಪ&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಈವರೆಗೆ 32 ದೇವರ ಗುಡಿಗಳು ಹಾಗೂ 36 ಬಾವಿಗಳನ್ನು ಪತ್ತೆ ಮಾಡಿದ್ದು, ಇನ್ನೂ 68 ಗುಡಿಗಳು ಮತ್ತು 64 ಬಾವಿಗಳನ್ನು ಉತ್ಖನನ ಮಾಡಬೇಕಿದೆ. ಆ ಉತ್ಖನನ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುತ್ತಿದ್ದು, ಈ ವರ್ಷದ ಡಿಸೆಂಬರ್&zwnj; ಅಂತ್ಯದೊಳಗೆ ಉತ್ಖನನ ಕಾರ್ಯ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್&zwnj;.ಕೆ. ಪಾಟೀಲ್&zwnj; ತಿಳಿಸಿದರು.&lt;/p&gt;&lt;img&gt;&lt;p&gt;ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್&zwnj;.ಕೆ. ಪಾಟೀಲ್&zwnj;, ಲಕ್ಕುಂಡಿಯನ್ನು 100 ದೇವರ ಗುಡಿಗಳು ಮತ್ತು 100 ಬಾವಿಗಳಿರುವ ಸ್ಥಳ ಎಂದು ಕರೆಯಲಾಗುತ್ತದೆ. ಅವುಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದರಂತೆ ಕಳೆದೆರಡು ವರ್ಷಗಳಿಂದೀಚೆಗೆ ಉತ್ಖನನ ಕಾರ್ಯ ನಡೆಸಲಾಗುತ್ತಿದ್ದು, ಈವರೆಗೆ 32 ದೇವರ ಗುಡಿಗಳು ಹಾಗೂ 36 ಬಾವಿಗಳನ್ನು ಪತ್ತೆ ಮಾಡಲಾಗಿದೆ. ಉಳಿದವುಗಳ ಪತ್ತೆಗೆ ಉತ್ಖನನ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ ಎಂದರು.&lt;/p&gt;&lt;img&gt;&lt;p&gt;ಲಕ್ಕುಂಡಿಯಲ್ಲಿ ಕಳೆದೊಂದು ವರ್ಷದಿಂದ 3 ಸಾವಿರಕ್ಕೂ ಹೆಚ್ಚಿನ ಪ್ರಾಚ್ಯಾವಶೇಷಗಳು ಸಂಗ್ರಹವಾಗಿವೆ. ಅದರಲ್ಲೂ ಕಳೆದ 12 ದಿನಗಳಲ್ಲಿಯೇ 1500 ಪ್ರಾಚ್ಯಾವಶೇಷಗಳು ಪತ್ತೆಯಾಗಿ, ಅವನ್ನು ಸಂಸ್ಕರಿಸಲಾಗಿದೆ. ಇನ್ನು, ಲಕ್ಕುಂಡಿ ಗ್ರಾಮಸ್ಥರೇ 1500ಕ್ಕೂ ಹೆಚ್ಚಿನ ಪ್ರಾಚ್ಯಾವಶೇಷಗಳನ್ನು ನಮಗೆ ನೀಡಿದ್ದಾರೆ. ಮತ್ತಷ್ಟು ಉತ್ಖನನ ನಡೆಸಿ ಪ್ರಾಚ್ಯವಸ್ತುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಂಪಿ ಉತ್ಖನನ: ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ&lt;/strong&gt;&lt;/p&gt;&lt;img&gt;&lt;p&gt;ಲಕ್ಕುಂಡಿಯಲ್ಲಿ ಹೊಯ್ಸಳ, ಚಾಲುಕ್ಯ, ವಿಜಯನಗರ ಸಾಮ್ರಾಜ್ಯದ ಅವಶೇಷಗಳು, ವಾಸ್ತುಶಿಲ್ಪಗಳಿವೆ. ಅವುಗಳನ್ನು ಪತ್ತೆ ಮಾಡಲಾಗುತ್ತಿದ್ದು, ಅವುಗಳ ಸಂರಕ್ಷಣೆಗಾಗಿ ತೆರೆದ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅದಕ್ಕೆ ಅಗತ್ಯ ಭೂಮಿಯನ್ನು ನಿಗದಿ ಮಾಡಲಾಗಿದೆ. ಹಾಗೆಯೇ, ಲಕ್ಕುಂಡಿಯನ್ನು ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸುವ ಸಲುವಾಗಿ ಯುನೆಸ್ಕೋಗೆ ಪ್ರಸ್ತಾವನೆಯನ್ನೂ ಕಳುಹಿಸಲಾಗುವುದು ಎಂದು ವಿವರಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23"/>
        </item>
        <item>
            <title><![CDATA[ಗದಗದಲ್ಲಿ ಇಂಧನಕ್ಕೆ ಹಾಹಾಕಾರ, ಬಂಕ್‌ಗಳೇ ಖಾಲಿ, ರೈತರು ಮತ್ತು ಸವಾರರ ಕಿಲೋಮೀಟರ್ ಉದ್ದದ ಕ್ಯೂ!]]></title>
            <link>https://kannada.asianetnews.com/karnataka-districts/fuel-crisis-hits-gadag-massive-shortage-no-stock-signs-put-up-as-panicked-farmers-queue-up-for-diesel-gdp/articleshow-753yho9</link>
            <guid isPermaLink="true">https://kannada.asianetnews.com/karnataka-districts/fuel-crisis-hits-gadag-massive-shortage-no-stock-signs-put-up-as-panicked-farmers-queue-up-for-diesel-gdp/articleshow-753yho9</guid>
            <pubDate>Mon, 25 May 2026 17:14:02 +0530</pubDate>
            <description><![CDATA[ಗದಗ ಜಿಲ್ಲೆಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ತೀವ್ರಗೊಂಡಿದ್ದು, ಪ್ರಮುಖ ಬಂಕ್&zwnj;ಗಳು 'ನೋ ಸ್ಟಾಕ್' ಬೋರ್ಡ್ ಹಾಕಿವೆ. ಮುಂಗಾರು ಹಂಗಾಮಿನ ಹೊತ್ತಲ್ಲಿ ಡೀಸೆಲ್&zwnj;ಗಾಗಿ ರೈತರು ಪರದಾಡುತ್ತಿದ್ದು, ಹುಬ್ಬಳ್ಳಿ ಡಿಪೋದಿಂದ ಸರಬರಾಜು ಸ್ಥಗಿತಗೊಂಡಿರುವುದೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗಿದೆ. ಈ ಸಮಸ್ಯೆಯು ನಗರದಿಂದ ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksff3ktkep4q5sn0tcvhvxe2,imgname-fuel-crisis-hits-gadag-1779709366099.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ಗದಗ ಜಿಲ್ಲೆಯಾದ್ಯಂತ ಇಂಧನ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾರ್ವಜನಿಕರು ಹಾಗೂ ರೈತರು ಪೆಟ್ರೋಲ್ ಮತ್ತು ಡೀಸೆಲ್&zwnj;ಗಾಗಿ ತೀವ್ರ ಪರದಾಡುವಂತಾಗಿದೆ. ಒಂದು ಕಡೆ ದಿನೇ ದಿನೆ ಏರಿಕೆಯಾಗುತ್ತಿರುವ ಇಂಧನ ಬೆಲೆಯಿಂದ ಕಂಗಾಲಾಗಿದ್ದ ಜನರಿಗೆ, ಇದೀಗ ಜಿಲ್ಲೆಯ ಪ್ರಮುಖ ಪೆಟ್ರೋಲ್ ಬಂಕ್&zwnj;ಗಳು ಇಂಧನವಿಲ್ಲದೆ ಬಂದ್ ಆಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜಿಲ್ಲೆಯಾದ್ಯಂತ &lsquo;ನೋ ಸ್ಟಾಕ್&rsquo; (No Stock) ಶಾಕ್ ಎದುರಾಗಿದ್ದು, ವಾಹನ ಸವಾರರು ತೈಲಕ್ಕಾಗಿ ಅಲೆದಾಡುತ್ತಿದ್ದಾರೆ.&lt;/p&gt;&lt;h2&gt;ಗಜೇಂದ್ರಗಡದಲ್ಲಿ ಡೀಸೆಲ್ ಭೀತಿ: ಕ್ಯಾನ್ ಹಿಡಿದು ಮುಗಿಬಿದ್ದ ರೈತರು&lt;/h2&gt;&lt;p&gt;ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲೂ ಡೀಸೆಲ್ ಪಡೆಯಲು ಗ್ರಾಹಕರು ಮುಗಿಬಿದ್ದಿದ್ದಾರೆ. ಮಳೆಗಾಲದ ಮುನ್ನ ಮುಂಗಾರು ಹಂಗಾಮಿಗೆ ಜಮೀನು ಹದಗೊಳಿಸಲು ಟ್ರ್ಯಾಕ್ಟರ್&zwnj;ಗಳಿಗೆ ಡೀಸೆಲ್ ಸಂಗ್ರಹಿಸಿಟ್ಟುಕೊಳ್ಳಲು ರೈತರು ಮುಂದಾಗಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಡೀಸೆಲ್ ಸಂಪೂರ್ಣ ಖಾಲಿಯಾಗಲಿದೆ ಎಂಬ ಭೀಕರ ವದಂತಿ ಹರಡಿರುವ ಹಿನ್ನೆಲೆಯಲ್ಲಿ, ಗಜೇಂದ್ರಗಡ ಪಟ್ಟಣದ ಸುತ್ತಮುತ್ತಲಿನ ರಾಜೂರು, ಕಾಲಕಾಲೇಶ್ವರ ಸೇರಿದಂತೆ ಹಲವು ಹಳ್ಳಿಗಳ ರೈತರು ಟ್ರ್ಯಾಕ್ಟರ್&zwnj;ಗಳನ್ನು ಬಿಟ್ಟು ಕೇವಲ ಪ್ಲಾಸ್ಟಿಕ್ ಕ್ಯಾನ್&zwnj;ಗಳನ್ನು ಹಿಡಿದುಕೊಂಡು ಪೆಟ್ರೋಲ್ ಬಂಕ್&zwnj;ಗಳ ಮುಂದೆ ಜಮಾಯಿಸಿದ್ದಾರೆ.&lt;/p&gt;&lt;p&gt;ಗಜೇಂದ್ರಗಡ ಪಟ್ಟಣದಲ್ಲಿರುವ ಒಟ್ಟು 8 ಪೆಟ್ರೋಲ್ ಬಂಕ್&zwnj;ಗಳ ಪೈಕಿ ಸದ್ಯಕ್ಕೆ ಕೇವಲ 2 ಬಂಕ್&zwnj;ಗಳಲ್ಲಿ ಮಾತ್ರ ಅಲ್ಪಸ್ವಲ್ಪ ಇಂಧನ ಲಭ್ಯವಿದ್ದು, ಅಲ್ಲಿ ಕಿಲೋಮೀಟರ್&zwnj; ಗಟ್ಟಲೆ ಸಾಲು ಕಂಡುಬಂದಿದೆ. ವಿಶೇಷವಾಗಿ ಕುಷ್ಟಗಿ ರಸ್ತೆಯ ರಾಯಬಾಗಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ರೈತರು ಕ್ಯಾನ್&zwnj;ಗಳ ಸಮೇತ ಸರದಿಸಾಲಿನಲ್ಲಿ ನಿಂತಿರುವುದು ಪರಿಸ್ಥಿತಿಯ ಗಂಭೀರತೆಗೆ ಕೈಗನ್ನಡಿಯಾಗಿದೆ.&lt;/p&gt;&lt;h2&gt;ನಗರದ ಪ್ರಮುಖ ವೃತ್ತಗಳ ಬಂಕ್&zwnj;ಗಳು ಬಂದ್&lt;/h2&gt;&lt;p&gt;ಕಳೆದ ಮೂರು ದಿನಗಳಿಂದಲೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದ ಇಂಧನ ಕೊರತೆ, ಇದೀಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಗದಗ ನಗರದ ಅತ್ಯಂತ ಜನದಟ್ಟಣೆಯ ಪ್ರಮುಖ ವೃತ್ತಗಳಲ್ಲಿರುವ ಮೂರು ಪ್ರಮುಖ ಪೆಟ್ರೋಲ್ ಬಂಕ್&zwnj;ಗಳು ಸಂಪೂರ್ಣವಾಗಿ ಖಾಲಿಯಾಗಿವೆ. ನಗರದ ಮುಳಗುಂದ ನಾಕಾ, ಹಳೆಯ ಡಿಸಿ ಆಫೀಸ್ ಸರ್ಕಲ್ ಹಾಗೂ ಹೊಸ ಬಸ್ ನಿಲ್ದಾಣದ ಬಳಿ ಇರುವ ಪೆಟ್ರೋಲ್ ಬಂಕ್&zwnj;ಗಳಲ್ಲಿ ಇಂಧನ ಸಂಪೂರ್ಣ ಖಾಲಿಯಾಗಿದೆ. ತೈಲ ಮುಗಿದ ಕಾರಣ ಬಂಕ್ ಸಿಬ್ಬಂದಿ ಮುಂಭಾಗದಲ್ಲೇ &lsquo;ನೋ ಸ್ಟಾಕ್&rsquo; ಬೋರ್ಡ್ ತೂಗುಹಾಕಿದ್ದು, ಸವಾರರನ್ನು ವಾಪಸ್ ಕಳುಹಿಸುತ್ತಿದ್ದಾರೆ.&lt;/p&gt;&lt;h2&gt;ಹುಬ್ಬಳ್ಳಿ ಡಿಪೋದಿಂದ ಸರಬರಾಜು ಸ್ಥಗಿತ?&lt;/h2&gt;&lt;p&gt;ವಿಶ್ವಾಸಾರ್ಹ ಮೂಲಗಳ ಪ್ರಕಾರ, ಹುಬ್ಬಳ್ಳಿಯ ಮುಖ್ಯ ತೈಲ ಡಿಪೋದಿಂದ ಗದಗ ಜಿಲ್ಲೆಗೆ ಬರಬೇಕಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ಸರಕು ಸಾಗಣೆ (ಸ್ಟಾಕ್) ಸಕಾಲಕ್ಕೆ ತಲುಪದ ಹಿನ್ನೆಲೆಯಲ್ಲಿ ಈ ತೀವ್ರ ಅಭಾವ ಸೃಷ್ಟಿಯಾಗಿದೆ ಎನ್ನಲಾಗಿದೆ. ಗದಗ ನಗರ ಮಾತ್ರವಲ್ಲದೆ, ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳಾದ ಹುಬ್ಬಳ್ಳಿ ರಸ್ತೆ, ಕೊಪ್ಪಳ ರಸ್ತೆ ಹಾಗೂ ಬಾಗಲಕೋಟೆ ರಸ್ತೆಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಬಂಕ್&zwnj;ಗಳಲ್ಲಿಯೂ ಇದೇ ಸಮಸ್ಯೆ ಎದುರಾಗಿದೆ. ಇದರಿಂದಾಗಿ ದೂರದ ಊರುಗಳಿಗೆ ಸಂಚರಿಸುವ ಲಾರಿ, ಬಸ್ ಹಾಗೂ ಅಗತ್ಯ ವಸ್ತುಗಳ ಸರಕು ಸಾಗಣೆ ವಾಹನಗಳ ಚಾಲಕರು ರಸ್ತೆಯಲ್ಲೇ ನಿಲ್ಲುವಂತಾಗಿದ್ದು, ಕಂಗಾಲಾಗಿದ್ದಾರೆ.&lt;/p&gt;&lt;h2&gt;ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ ಇಂಧನ ಗಂಡಾಂತರ&lt;/h2&gt;&lt;p&gt;ಈ ಇಂಧನ ಅಭಾವದ ಬಿಸಿ ಕೇವಲ ನಗರ ಪ್ರದೇಶಕ್ಕಷ್ಟೇ ಸೀಮಿತವಾಗಿರದೆ, ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರಗಳಾದ ಶಿರಹಟ್ಟಿ, ಬೆಳ್ಳಟ್ಟಿ, ರೋಣ ಹಾಗೂ ನರಗುಂದ ಭಾಗಗಳಿಗೂ ವ್ಯಾಪಿಸಿದೆ. ಗ್ರಾಮೀಣ ಭಾಗದ ಸಾರ್ವಜನಿಕರು ತಾಲೂಕು ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಕೃಷಿ ಚಟುವಟಿಕೆಗಳ ವೇಗ ಪಡೆದುಕೊಳ್ಳುವ ಈ ಪ್ರಮುಖ ಅವಧಿಯಲ್ಲೇ ಡೀಸೆಲ್ ಸಿಗದೆ ಇರುವುದು ರೈತರ ಆತಂಕವನ್ನು ದುಪ್ಪಟ್ಟು ಮಾಡಿದೆ.&lt;/p&gt;&lt;p&gt;ಸತತ ಮೂರು ದಿನಗಳಿಂದ ತೈಲ ಅಭಾವ ತಲೆದೋರಿರುವುದು ಮತ್ತು ಬಂಕ್&zwnj;ಗಳ ಮುಂದೆ ಸಾಲು ಸಾಲಾಗಿ &lsquo;ನೋ ಸ್ಟಾಕ್&rsquo; ಬೋರ್ಡ್&zwnj;ಗಳು ಕಾಣಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಮುಂದಿನ ದಿನಗಳಲ್ಲಿ ಇಂಧನ ಸಂಪೂರ್ಣ ಕೈಕೊಡಲಿದೆಯೇ ಎಂಬ ಭೀತಿ ಆವರಿಸಿದೆ. ಹೀಗಾಗಿ, ಸಿಕ್ಕ ಸಿಕ್ಕ ಬಂಕ್&zwnj;ಗಳ ಮುಂದೆ ಸವಾರರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಿದ್ದಾರೆ. ಜಿಲ್ಲಾಡಳಿತ, ಸಂಬಂಧಪಟ್ಟ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ತೈಲ ಕಂಪನಿಗಳು ತಕ್ಷಣವೇ ಮಧ್ಯಪ್ರವೇಶಿಸಿ ತೈಲ ಸರಬರಾಜನ್ನು ಸುಗಮಗೊಳಿಸಬೇಕೆಂದು ಸಾರ್ವಜನಿಕರು ಮತ್ತು ರೈತ ಸಂಘಟನೆಗಳು ತೀವ್ರ ಆಗ್ರಹ ಮಾಡಿವೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/fuel-crisis-hits-gadag-massive-shortage-no-stock-signs-put-up-as-panicked-farmers-queue-up-for-diesel-gdp/articleshow-753yho9"/>
        </item>
        <item>
            <title><![CDATA[ಸರ್ಕಾರಿ ಶಾಲೆಗೆ ಮಗು ದಾಖಲಿಸಿದರೆ ₹1000 ಎಫ್‌ಡಿ; ಮುಖ್ಯೋಪಾಧ್ಯಾಯರಿಂದ ಹೊಸ ಯೋಜನೆ]]></title>
            <link>https://kannada.asianetnews.com/karnataka-districts/gadag-mundaragi-rs-1000-fd-if-a-child-is-enrolled-in-a-government-school-new-scheme-from-the-headmaster-sm-patil-mrq/articleshow-c73g1af</link>
            <guid isPermaLink="true">https://kannada.asianetnews.com/karnataka-districts/gadag-mundaragi-rs-1000-fd-if-a-child-is-enrolled-in-a-government-school-new-scheme-from-the-headmaster-sm-patil-mrq/articleshow-c73g1af</guid>
            <pubDate>Thu, 21 May 2026 08:11:55 +0530</pubDate>
            <description><![CDATA[&lt;p&gt;ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಂ. ಪಾಟೀಲ ಅವರು ಶಾಲಾ ದಾಖಲಾತಿ ಹೆಚ್ಚಿಸಲು ವಿನೂತನ ಯೋಜನೆ ಆರಂಭಿಸಿದ್ದಾರೆ. ಒಂದನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ₹1000 ಫಿಕ್ಸೆಡ್ ಡೆಪಾಸಿಟ್ ಇಡುವ ಮೂಲಕ ಅವರು ಮಾದರಿಯಾಗಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jyqts0wcz0xkck9vzbd5hq7g,imgname-----------------------2025-06-27t100557.847-1750999008140.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಿಯಾಜಅಹ್ಮದ ದೊಡ್ಡಮನಿ&lt;/strong&gt;&lt;/p&gt;&lt;p&gt;&lt;strong&gt;ಡಂಬಳ: &lt;/strong&gt;ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಹಲವೆಡೆ ನಾನಾ ಪ್ರಯತ್ನಗಳು ನಡೆಯುತ್ತಿದ್ದು, ಇಲ್ಲೊಬ್ಬ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಸರ್ಕಾರಿ ಶಾಲೆಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ₹1000 ಎಫ್&zwnj;ಡಿ ಇಡುತ್ತಿದ್ದಾರೆ.&lt;/p&gt;&lt;p&gt;ಇಂಥದ್ದೊಂದು ಯೋಜನೆಯನ್ನು ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್&zwnj;ಪಿ)ಯೂ ಆಗಿರುವ ಎಸ್.ಎಂ. ಪಾಟೀಲ ಜಾರಿಗೆ ತಂದಿದ್ದಾರೆ.&lt;/p&gt;&lt;p&gt;ಈ ಶೈಕ್ಷಣಿಕ ವರ್ಷದಲ್ಲಿ ಕೆಲೂರಿನ ಸರ್ಕಾರಿ ಶಾಲೆಯಲ್ಲಿ 1ನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿಗೆ ₹1 ಸಾವಿರ ಫಿಕ್ಸ್ ಡೆಪಾಸಿಟ್ (5 ವರ್ಷ) ಇಡಲು ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್&zwnj;.ಎಂ. ಪಾಟೀಲ ಅವರು ₹10,000 ದೇಣಿಗೆಯನ್ನು ಎಸ್&zwnj;ಡಿಎಂಸಿ&zwnj; ಸದಸ್ಯರ ಸಮ್ಮುಖದಲ್ಲಿ ಶಾಲೆಗೆ ನೀಡಿದರು. ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ತಕ್ಕಂತೆ ಹಣ ನೀಡುವುದಾಗಿ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;1994ರಿಂದ ವೃತ್ತಿ ಪ್ರಾರಂಭ&lt;/strong&gt;&lt;/h2&gt;&lt;p&gt;ಎಸ್&zwnj;.ಎಂ. ಪಾಟೀಲ ಅವರು ಮೂಲತಃ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದವರು. ಮಲ್ಲನಗೌಡ, ಸಕ್ರಮ್ಮ ಇವರ ತಂದೆ- ತಾಯಿಗಳು. 1994ರ ಆ. 12ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಉರಗನದೊಡ್ಡಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ವೃತ್ತಿಯನ್ನು ಆರಂಭಿಸಿ 3 ವರ್ಷ ಸೇವೆ ಸಲ್ಲಿಸಿದರು.&lt;/p&gt;&lt;p&gt;ನಂತರ 1997ರಲ್ಲಿ ಡಂಬಳ ಗ್ರಾಮದ ಸರ್ಕಾರಿ ಡಿಪಿಇಪಿ ಶಾಲೆಯಲ್ಲಿ 12 ವರ್ಷ, ಲಕ್ಕುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 10 ವರ್ಷ ಸೇವೆ ಸಲ್ಲಿಸಿದರು. ಕದಾಂಪುರ ಕ್ಲಸ್ಟರ್&zwnj;ಗೆ ಸಿಆರ್&zwnj;ಪಿ ಆಗಿ ಸೇವೆ ಮತ್ತು ಅದರ ಜತೆಗೆ ಕೆಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯೋಪಾಧ್ಯಾಯರಾಗಿ ನಿಯೋಜನೆಗೊಂಡಿದ್ದಾರೆ.&lt;/p&gt;&lt;p&gt;&lt;strong&gt;ಪ್ರಶಸ್ತಿ:&lt;/strong&gt; ಇವರ ಸಾಧನೆ ಮೆಚ್ಚಿ ಜನಮೆಚ್ಚಿದ ಶಿಕ್ಷಕ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ. ಹೀಗೆ ಅನೇಕ ಪ್ರಶಸ್ತಿಗಳನ್ನು ಲಭಿಸಿವೆ.&lt;/p&gt;&lt;p&gt;&lt;img&gt;&lt;/p&gt;&lt;h3&gt;&lt;strong&gt;ವಿದ್ಯಾರ್ಥಿಗಳ ಹಿತಚಿಂತಕರು ಎಸ್&zwnj;.ಎಂ. ಪಾಟೀಲ&lt;/strong&gt;&lt;/h3&gt;&lt;p&gt;ದಾನಿಗಳಿಂದ ₹14 ಲಕ್ಷ ಹಣ ಸಂಗ್ರಹಿಸಿ ವಿದ್ಯಾರ್ಥಿಗಳ ಹಿತಕ್ಕಾಗಿ, ಶೈಕ್ಷಣಿಕ ಪ್ರಗತಿಗಾಗಿ ಬಳಸುತ್ತಿದ್ದಾರೆ. ಬೋಧನಾ ಕೌಶಲ್ಯದ ಮೂಲಕ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ.&lt;/p&gt;&lt;p&gt;&lt;strong&gt;ಮನವಿ: &lt;/strong&gt;ಹಿರಿಯ ಅಧಿಕಾರಿಗಳ ಸಲಹೆಯಂತೆ ಕೆಲೂರ ಶಾಲೆಯ ಒಂದನೆ ತರಗತಿಗೆ ದಾಖಲಾಗುವ ಪ್ರತಿ ಮಗುವಿಗೆ ₹1 ಸಾವಿರ ಎಫ್&zwnj;ಡಿ ಇಡುತ್ತಿದ್ದೇನೆ. ಗ್ರಾಮಸ್ಥರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲಿಸಬೇಕು ಎಂದು ಮುಖ್ಯಾಪಾಧ್ಯಾಯರಾದ ಎಸ್.ಎಂ. ಪಾಟೀಲ ಮನವಿ ಮಾಡಿದರು.&lt;/p&gt;&lt;p&gt;&lt;strong&gt;ಪ್ರಶಂಸನೀಯ:&lt;/strong&gt; ಎಸ್.ಎಂ. ಪಾಟೀಲ ಅವರು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ. ಕೆಲೂರ ಸರ್ಕಾರಿ ಶಾಲೆಯ ಮಕ್ಕಳ ಹೆಸರಿನಲ್ಲಿ ₹1 ಸಾವಿರ ಎಫ್&zwnj;ಡಿ ಇಡುತ್ತಿರುವುದು ಪ್ರಶಂಸನೀಯ ಎಂದು ಬಿಇಒ ಗಂಗಾಧರ ಅಣ್ಣಿಗೇರಿ ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-mundaragi-rs-1000-fd-if-a-child-is-enrolled-in-a-government-school-new-scheme-from-the-headmaster-sm-patil-mrq/articleshow-c73g1af"/>
        </item>
        <item>
            <title><![CDATA[ಡಿಕೆಶಿ ಸಂಪುಟಕ್ಕೆ ಮೊದಲು ಮ್ಯಾನೇಜ್ಮೆಂಟ್ ಕೋಟಾ ಸಚಿವರು; ಭಾರೀ ಚರ್ಚೆಗೆ ಕಾರಣವಾದ ಕಾಂಗ್ರೆಸ್ ಮುಖಂಡನ ಪೋಸ್ಟ್!]]></title>
            <link>https://kannada.asianetnews.com/gallery/state/gadag-congress-controversy-hk-patil-supporters-management-quota-post-sat-gdcvuis</link>
            <guid isPermaLink="true">https://kannada.asianetnews.com/gallery/state/gadag-congress-controversy-hk-patil-supporters-management-quota-post-sat-gdcvuis</guid>
            <pubDate>Fri, 05 Jun 2026 15:18:38 +0530</pubDate>
            <description><![CDATA[&lt;p&gt;ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಗದಗ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಸಿದ್ದು ಪಾಟೀಲರು 'ಮ್ಯಾನೇಜ್ಮೆಂಟ್ ಕೋಟಾ' ಸಚಿವರು ಎಂದು ಪೋಸ್ಟ್ ಹಾಕಿ ಡಿಲೀಟ್ ಮಾಡಿದ್ದಾರೆ. ಈ ಪೋಸ್ಟ್&zwnj;ನ ಸ್ಕ್ರೀನ್&zwnj;ಶಾಟ್ ವೈರಲ್ ಆಗಿದ್ದು, ಕಾಂಗ್ರೆಸ್&zwnj;ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktbjkyvrfgav2y6zbg458r58,imgname-hk-patil-post-1780652571512.jpg" type="image/jpeg" height="390" width="690"/>
            <content:encoded><![CDATA[&lt;p&gt;ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಗದಗ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಸಿದ್ದು ಪಾಟೀಲರು 'ಮ್ಯಾನೇಜ್ಮೆಂಟ್ ಕೋಟಾ' ಸಚಿವರು ಎಂದು ಪೋಸ್ಟ್ ಹಾಕಿ ಡಿಲೀಟ್ ಮಾಡಿದ್ದಾರೆ. ಈ ಪೋಸ್ಟ್&zwnj;ನ ಸ್ಕ್ರೀನ್&zwnj;ಶಾಟ್ ವೈರಲ್ ಆಗಿದ್ದು, ಕಾಂಗ್ರೆಸ್&zwnj;ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.&lt;/p&gt;&lt;img&gt;&lt;p&gt;ಗದಗ (ಜೂ.05): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗೆ ಪ್ರಮಾಣ ವಚನ ಸ್ವೀರಿಸಿರುವ ನಾಯಕರು ಮ್ಯಾನೇಜ್ಮೆಂಟ್ ಕೋಟಾ (ದುಡ್ಡು ಕೊಟ್ಟ) ಸಚಿವರು ಎಂಬರ್ಥದ ಪೋಸ್ಟ್ ಅನ್ನು ಗದಗ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ ಹಾಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ&zwnj;. ಈ ಪೋಸ್ಟ್ ಮಾಡಿ ಕೆಲವೇ ನಿಮಿಷದಲ್ಲಿ ಡಿಲೀಟ್ ಮಾಡಿದರೂ ಅವರು ಹಾಕಿದ್ದ ಪೋಸ್ಟ್&zwnj;ನ ಸ್ಕ್ರೀನ್ ಶಾಟ್ ಗಳು ಸಾಮಾಜಿಕ&zwnj; ಜಾಲತಾಣದಲ್ಲಿ ವೈರಲ್ ಆಗುತ್ತಿವೆ.&lt;/p&gt;&lt;img&gt;&lt;p&gt;ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರನ್ನು ಮೊದಲ ಪಟ್ಟಿಯಿಂದ ಕೈ ಬಿಡಲಾಗಿದ್ದು, ಸ್ಥಳೀಯ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ&zwnj;. ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಅಂತೆಲ್ಲ ತರಹೇವಾರಿ ಪೋಸ್ಟ್ ಗಳನ್ನ ಬೆಂಬಲಿಗರು ಹರಿಬಿಟ್ಟಿದ್ದಾರಾದರೂ ಈ ಒಂದು ಪೋಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮ್ಯಾನೇಜ್ಮೆಂಟ್ ಕೋಟಾ ಅಂತಾ ಬರೆಯುವುದಲ್ಲದೇ ದುಡ್ಡಿನ ಚೀಲದ ಚಿಹ್ನೆಯನ್ನ ಹಾಕಲಾಗಿದೆ.&lt;/p&gt;&lt;img&gt;&lt;p&gt;ಮೊದಲು ಮ್ಯಾನೇಜ್ಮೆಂಟ್ ಕೋಟಾ ಮುಗೀಬೇಕು ಆಮೇಲೆ ಸರ್ಕಾರಿ ಕೋಟಾ ಅಂತಾ ಫೊಸ್ಟ್ ಮಾಡಿದ್ದಾರೆ. ಅಲ್ಲದೇ ಕಲಿಯುಗದ ಅಧಿಕಾರ ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಸದ್ಯ ಈ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದ್ದು, ಮ್ಯಾನೇಜ್ಮೆಂಟ್ ಕೋಟಾದವರು ಯಾರು, ಯಾರು, ಯಾರಿಗೆ ಹಣ ಕೊಟ್ಟಿದ್ದು? ಎನ್ನುವ ಚರ್ಚೆ ಶುರುವಾಗಿದೆ.&lt;/p&gt;&lt;img&gt;&lt;p&gt;ಮೊದಲ ಪಟ್ಟಿಯಲ್ಲಿ ಹೆಸರು ಇಲ್ಲದನ್ನ ಗಮನಿಸಿದ್ದ ಮಾಜಿ ಸಚಿವ ಎಚ್.ಕೆ. ಪಾಟೀಲರು, ಸಿದ್ಧಾಂತ ನಿಷ್ಠರಿಗೆ ಯಾವಾಗಲೂ ಹಾದಿ ಕಠಿಣವೇ, ಹೈಕಮಾಂಡ್ ನಿರ್ಧಾರ ಕ್ಕೆ ಒಪ್ಪೋಣ ಅಂತಾ ಕಾರ್ಯಕರ್ತರಿಗೆ ಟ್ವಿಟರ್ ಪೋಸ್ಟ್ ಮೂಲಕ ಸಂದೇಶ ನೀಡಿದ್ದರು. ಆದರೆ, ಕೆಲವೇ ನಿಮಿಷದಲ್ಲಿ ಆ ಸಂದೇಶವನ್ನೂ ಡಿಲೀಟ್ ಮಾಡಲಾಗಿತ್ತು.&lt;/p&gt;&lt;img&gt;&lt;p&gt;ಇತ್ತ ಅಲ್ಪ ಸಂಖ್ಯಾತರ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಕೊಪ್ಪಳ ರಾಜೀನಾಮೆ ಎಚ್ಚರಿಗೆ ನೀಡಿದ್ದಾರೆ. ಮಾಜಿ ಸಚಿವ ಎಚ್.ಕೆ. ಪಾಟೀಲರು ಯಾವುದೇ ಪ್ರತಿಭಟನೆ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ ಆದ್ರೂ ನಾವು ರಸ್ತೆಗಿಳಿದಿದ್ದೇವೆ&zwnj;. ಉತ್ತರ ಕರ್ನಾಟಕ ಧೀಮಂತ ನಾಯಕ, ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದ ನಾಯಕನ ಕಡೆಗಣನೆಯಾಗಿದೆ. ಮೊದಲ ಪಟ್ಟಿಯಲ್ಲಿ ನಿರ್ಲಕ್ಷಿಸಲಾಗಿದೆ.. ಆದರೆ ಎರಡನೇ ಪಟ್ಟಿಯಲ್ಲಿ ಪರಿಗಣಿಸದಿದ್ದರೆ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆಗೆ ಸಿದ್ಧ ಅಂತಾ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;img&gt;&lt;p&gt;ಗದಗ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಎಚ್ ಕೆ ಪಾಟೀಲರು ಆರು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.. ಅಲ್ದೆ, ಪಶ್ಚಿಮ ಪದವಿಧರರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದರು. 40 ವರ್ಷದ ಸುಧೀರ್ಘ ರಾಜಕೀಯ ಪಯಣದಲ್ಲಿ ಜವಳಿ, ಕಾನೂನು, ಕೃಷಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಸಚಿವರಾಗಿ ತನ್ನದೇಯಾದ ಛಾಪುಮೂಡಿಸಿದ್ದಾರೆ. 'ಹುಲಕೋಟಿಯ ಹುಲಿ' ಅಂತಾನೇ ಖ್ಯಾತರಾಗಿರೋ ಪಾಟೀಲರಿಗೆ ಈ ಬಾರಿ ಸಚಿವ ನೀಡದಿರೋದು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/gadag-congress-controversy-hk-patil-supporters-management-quota-post-sat-gdcvuis"/>
        </item>
        <item>
            <title><![CDATA[ಗದಗ: ಪ್ರೀತಿಸಿ ಮದುವೆಯಾದ ಗಂಡನಿಗೆ ಬೆಡ್ ರೂಂ ನಲ್ಲಿ ಕಬ್ಬಿಣದ ಸಲಾಕೆಯಿಂದ ಹೊಡೆದು ಚಟ್ಟ ಕಟ್ಟಿದ ಹೆಂಡತಿ!]]></title>
            <link>https://kannada.asianetnews.com/gallery/karnataka-districts/woman-kills-husband-with-iron-rod-inside-bedroom-after-domestic-dispute-in-gadag-gdp-hpaacp5</link>
            <guid isPermaLink="true">https://kannada.asianetnews.com/gallery/karnataka-districts/woman-kills-husband-with-iron-rod-inside-bedroom-after-domestic-dispute-in-gadag-gdp-hpaacp5</guid>
            <pubDate>Thu, 21 May 2026 15:18:36 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೊಬ್ಬಳು ತನ್ನ ಪತಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿ ನಡುವೆ ನಿರಂತರ ಜಗಳ ನಡೆಯುತ್ತಿದ್ದು, ಇದೇ ಕಾರಣಕ್ಕೆ ಈ ಘೋರ ಕೃತ್ಯ ನಡೆದಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks4yd2vs9zzt413g2hp3ryk6,imgname-bengaluru-police--3--1779356306297.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೊಬ್ಬಳು ತನ್ನ ಪತಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿ ನಡುವೆ ನಿರಂತರ ಜಗಳ ನಡೆಯುತ್ತಿದ್ದು, ಇದೇ ಕಾರಣಕ್ಕೆ ಈ ಘೋರ ಕೃತ್ಯ ನಡೆದಿದೆ.&amp;nbsp;&lt;/p&gt;&lt;img&gt;&lt;p&gt;ಗದಗ:ಅವರಿಬ್ಬರು ಒಬ್ಬರನ್ನು ಒಬ್ಬರು ಗಾಢವಾಗಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಅದ್ಯಾಕೋ ಮದುವೆಗೆ ಮುಂಚೆ ಇದ್ದ ಬಾಂಧವ್ಯ ಮದುವೆ ನಂತರ ಇರಲಿಲ್ಲ. ಹೀಗಾಗಿ ಇವರಿಬ್ಬರ ದಾಂಪತ್ಯದಲ್ಲಿ ಆಗಾಗ ಗಲಾಟೆಗಳು ನಡೆಯುತ್ತಿತ್ತು. ಇದೀಗ ದಂಪತಿ ಜಗಳದಲ್ಲಿ ಹೆಂಡತಿ ಗಂಡನನ್ನೇ ಮುಗಿಸಿರುವ ಘಟನೆ ನಡೆದಿದೆ. ಲ್ಲೆಯ ನರಗುಂದ ತಾಲ್ಲೂಕಿನ ರಡ್ಡೇರ ನಾಗನೂರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೇ ತನ್ನ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಡ್ ರೂಂನಲ್ಲೇ ಗಂಡನ ತಲೆಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಪತ್ನಿ ಕ್ರೂರವಾಗಿ ಹತ್ಯೆ ಮಾಡಿದ್ದಾಳೆ. ವಿಶ್ವನಾಥ ಹಾದಿಮನಿ (29) ಕೊಲೆಯಾದ ದುರ್ದೈವಿಯಾಗಿದ್ದು. ಪತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಪತ್ನಿ ಕವಿತಾಳನ್ನು ನರಗುಂದ ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.&lt;/p&gt;&lt;img&gt;&lt;p&gt;ಮೂಲಗಳ ಪ್ರಕಾರ, ವಿಶ್ವನಾಥ್ ಮತ್ತು ಕವಿತಾ ಕಳೆದ 2022 ರಲ್ಲಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಪ್ರೇಮ ವಿವಾಹವಾಗಿದ್ದರೂ ಸಹ, ಮದುವೆಯಾದ ಆರಂಭದ ದಿನಗಳಿಂದಲೇ ಇಬ್ಬರ ನಡುವೆ ಸಣ್ಣಪುಟ್ಟ ವಿಷಯಗಳಿಗೂ ಮನಸ್ತಾಪಗಳು ಶುರುವಾಗಿದ್ದವು. ದಂಪತಿಗಳ ನಡುವಿನ ವೈಮನಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.&lt;/p&gt;&lt;img&gt;&lt;p&gt;ಇದೇ ಕೌಟುಂಬಿಕ ಜಗಳದ ಕಾರಣದಿಂದಾಗಿ ಪತ್ನಿ ಕವಿತಾ ತನ್ನ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದಳು. ಇತ್ತೀಚೆಗಷ್ಟೇ ಹಿರಿಯರು ಸಂಧಾನ ನಡೆಸಿ, ಇಬ್ಬರನ್ನೂ ಒಂದು ಮಾಡಿದ್ದರು. ಅದರಂತೆ ಕೇವಲ 15 ದಿನಗಳ ಹಿಂದಷ್ಟೇ ಕವಿತಾ ತನ್ನ ಗಂಡನ ಮನೆಗೆ ಮರಳಿ ಬಂದಿದ್ದಳು. ಆದರೆ, ಮನೆಗೆ ಬಂದ ಮೇಲೂ ಇಬ್ಬರ ನಡುವಿನ ದಾಂಪತ್ಯ ಕಲಹ ಮಾತ್ರ ಮುಗಿದಿರಲಿಲ್ಲ.&lt;/p&gt;&lt;img&gt;&lt;p&gt;ಬುಧವಾರ ರಾತ್ರಿಯೂ ಸಹ ಪತಿ-ಪತ್ನಿಯ ನಡುವೆ ತೀವ್ರ ಸ್ವರೂಪದ ಜಗಳ ನಡೆದಿದೆ ಎನ್ನಲಾಗಿದೆ. ಈ ವೇಳೆ ತೀವ್ರ ಆಕ್ರೋಶಗೊಂಡ ಕವಿತಾ, ಪತಿ ವಿಶ್ವನಾಥ್ ಮಲಗುವ ಕೋಣೆಯಲ್ಲಿದ್ದಾಗ ಮನೆಯಲ್ಲಿದ್ದ ಕಬ್ಬಿಣದ ಸಲಾಕೆಯನ್ನು (Iron Rod) ತಂದು ಆತನ ತಲೆ ಹಾಗೂ ದೇಹದ ಭಾಗಕ್ಕೆ ಜೋರಾಗಿ ಹೊಡೆದಿದ್ದಾಳೆ. ಪತ್ನಿಯ ಭೀಕರ ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವಗೊಂಡು ವಿಶ್ವನಾಥ್ ಬೆಡ್ ರೂಂ ನಲ್ಲೇ ಕೊನೆಯುಸಿರೆಳೆದಿದ್ದಾರೆ.&lt;/p&gt;&lt;img&gt;&lt;p&gt;ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನರಗುಂದ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಡ್ಡೇರ ನಾಗನೂರು ಗ್ರಾಮದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಪತ್ನಿ ಕವಿತಾಳನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಆಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/woman-kills-husband-with-iron-rod-inside-bedroom-after-domestic-dispute-in-gadag-gdp-hpaacp5"/>
        </item>
        <item>
            <title><![CDATA[ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಕುಷ್ಟಗಿಯವರೆಗೆ ವಿಸ್ತರಿಸಲು ಹೆಚ್ಚಿದ ಒತ್ತಾಯ, ಪ್ರಯೋಜನವೇನು?]]></title>
            <link>https://kannada.asianetnews.com/gallery/karnataka-districts/demand-mounts-to-extend-bengaluru-hubballi-superfast-express-to-kushtagi-gdp-kiasa7k</link>
            <guid isPermaLink="true">https://kannada.asianetnews.com/gallery/karnataka-districts/demand-mounts-to-extend-bengaluru-hubballi-superfast-express-to-kushtagi-gdp-kiasa7k</guid>
            <pubDate>Wed, 27 May 2026 09:37:44 +0530</pubDate>
            <description><![CDATA[&lt;p&gt;ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಈ ವಿಸ್ತರಣೆಯು ಕುಷ್ಟಗಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಅನುಕೂಲವಾಗಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk9bp62qv9cthntcjy9jaten,imgname-chittur-railway-station-1773062002775.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಈ ವಿಸ್ತರಣೆಯು ಕುಷ್ಟಗಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಅನುಕೂಲವಾಗಲಿದೆ.&lt;/p&gt;&lt;img&gt;&lt;p&gt;ಕುಷ್ಟಗಿ: ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸುವಂತೆ ಒತ್ತಾಯಿಸಿ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಬೇಲಾಮೀನಾ ಅವರಿಗೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯವರು ಮನವಿ ಸಲ್ಲಿಸಿದರು. ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿರೇಶ ಬಂಗಾರಶೆಟ್ಟರ ಮಾತನಾಡಿ, ಬೆಂಗಳೂರು ಹುಬ್ಬಳ್ಳಿ ಚಲಿಸುವ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸಬೇಕು ಎಂದರು.&lt;/p&gt;&lt;img&gt;&lt;p&gt;ಗದಗ ರೈಲ್ವೆ ಹೋರಾಟ ಸಮಿತಿಯವರು ಈಗಾಗಲೇ ಆಂದೋಲನ ಪ್ರಾರಂಭಿಸಿದ್ದು, ಈ ರೈಲನ್ನು ಗದಗಕ್ಕೆ ವಿಸ್ತರಿಸುವಂತೆ ಒತ್ತಾಯಿಸಿ ಹಲವಾರು ಮನವಿ ಸಲ್ಲಿಸಿದ್ದಾರೆ. ಮುಂದಿನ ಹಂತವಾಗಿ, ಈ ರೈಲನ್ನು ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಗೆ ವಿಸ್ತರಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದರು.ಈ ಸೌಲಭ್ಯ ಕುಷ್ಟಗಿ ತಾಲೂಕು ಮಾತ್ರವಲ್ಲದೆ,ಗಜೇಂದ್ರಗಡ, ಇಲಕಲ್, ಯಲಬುರ್ಗಾ, ಕುಕನೂರು ಮತ್ತು ಗದಗ ಜಿಲ್ಲೆಯ ಜನರಿಗೂ ಪ್ರಯೋಜನ ನೀಡುತ್ತದೆ. ಇದು ವೈದ್ಯಕೀಯ ಅಗತ್ಯ, ಹೈಕೋರ್ಟ್, ಶಿಕ್ಷಣ ಮತ್ತು ವ್ಯವಹಾರಕ್ಕೆ ಅನುಕೂಲಕರವಾಗಲಿದೆ ಕಾರ್ಮಿಕರಿಗೂ ಇದು ಪ್ರಯೋಜನ ನೀಡುತ್ತದೆ ಎಂದರು.&lt;/p&gt;&lt;img&gt;&lt;p&gt;ಹಬ್ಬಗಳ ಸಮಯದಲ್ಲಿ ಖಾಸಗಿ ಬಸ್&zwnj;ಗಳಿಂದ ಅಕ್ರಮವಾಗಿ ಅಧಿಕ ಶುಲ್ಕ ವಿಧಿಸುವುದನ್ನು ಇದು ತಡೆಯುತ್ತದೆ. ಬೆಂಗಳೂರು-ಹುಬ್ಬಳ್ಳಿ ರೈಲನ್ನು ಗದಗ ಮೂಲಕ ಕುಷ್ಟಗಿಗೆ ವಿಸ್ತರಿಸುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್&zwnj;ಗಳಲ್ಲಿ ಬೆಂಗಳೂರಿಗೆ ಪ್ರತಿ ದಿನ ಪ್ರಯಾಣಿಸುವ ಜನರಿಗೆ ಸಹಕಾರಿಯಾಗಲಿದೆ ಎಂದರು. ಕಳೆದ ವರ್ಷ ಮೇ 15ರಂದು ಗದಗ-ವಾಡಿ ರೈಲ್ವೆ ಯೋಜನೆ ಕುಷ್ಟಗಿಯಿಂದ ಹುಬ್ಬಳ್ಳಿಗೆ ರೈಲು ಸಂಪರ್ಕ ಸಕ್ರಿಯಗೊಳಿಸಿದ ನಂತರ, ಕುಷ್ಟಗಿ-ಬೆಂಗಳೂರು ಸಂಪರ್ಕದ ಬೇಡಿಕೆ ಬಲವಾಗಿ ಕೇಳಿಬರುತ್ತಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಹಲವಾರು ಮನವಿ ಸಲ್ಲಿಸಲಾಗಿದೆ. ಕುಷ್ಟಗಿಗೆ ರೈಲು ಸೇವೆ ಆರಂಭವಾಗಿ ವರ್ಷ ಕಳೆದರೂ ಮತ್ತೊಂದು ರೈಲು ಸಂಪರ್ಕ ಪಡೆಯುವ ಕನಸು ಇನ್ನೂ ನನಸಾಗಿಲ್ಲ ಎಂದರು.&lt;/p&gt;&lt;img&gt;&lt;p&gt;ಕುಷ್ಟಗಿಯಿಂದ ಹುಬ್ಬಳ್ಳಿಗೆ ಒಂದೇ ಒಂದು ರೈಲು ಚಲಿಸುತ್ತದೆ. ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಲಾದ ಈ ರೈಲು ನಿಲ್ದಾಣ ಬೆಳಗ್ಗೆ 6-7 ಮತ್ತು ರಾತ್ರಿ 8-9 ರವರೆಗೆ ಮಾತ್ರ ಪ್ರಯಾಣಿಕರು ಇರುತ್ತಿದ್ದು ಉಳಿದ ಸಮಯಗಳಲ್ಲಿ ನಿರ್ಜನ ಪ್ರದೇಶವಾಗಿರುತ್ತದೆ. ಆದ್ದರಿಂದ ಕುಷ್ಟಗಿಯಿಂದ ಹುಬ್ಬಳ್ಳಿಗೆ ಮತ್ತೊಂದು ರೈಲು ಮತ್ತು ಕುಷ್ಟಗಿಯಿಂದ ಬೆಂಗಳೂರಿಗೆ ರೈಲು ಸಂಪರ್ಕದ ಕುರಿತು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಈ ಕುರಿತು ಈಗಾಗಲೆ ಸಂಬಂಧಿಸಿದ ಸಚಿವರಿಗೆ ಹಾಗೂ ಸಂಸದರಿಗೂ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖರಾದ ಶ್ರೀಧರ ಘೋರ್ಪಡೆ, ಮಂಜುನಾಥ ಮಹಾಲಿಂಗಪೂರ, ಬಸವರಾಜ ಸಾಲಿಮಠ ಸೇರಿದಂತೆ ಅನೇಕರು ಇದ್ದರು.&lt;/p&gt;&lt;img&gt;&lt;p&gt;ಕುಷ್ಟಗಿ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದ್ದು, ಕುಡಿಯುವ ನೀರಿನ ಸೌಲಭ್ಯ, ಕಳ್ಳತನ ಪ್ರಕರಣಗಳ ತಡೆಗೆ ಭದ್ರತಾ ಸಿಬ್ಬಂದಿ ವ್ಯವಸ್ಥೆ ಮಾಡಬೇಕಿದೆ, ರೈಲ್ವೆ ಪೊಲೀಸರನ್ನು ನಿಯೋಜಿಸಬೇಕು ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕಿದೆ, ನಿರಂತರ ವಿದ್ಯುತ್ ಒದಗಿಸುವುದು, ಕುಷ್ಟಗಿಯಿಂದ ಹುಬ್ಬಳ್ಳಿಗೆ ಬೆಳಗ್ಗೆ 7 ಗಂಟೆಗೆ ರೈಲು ಓಡಿಸಬೇಕಿದೆ, ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮೊದಲನೆ ಪ್ಲಾಟ್ ಫಾರಂಗೆ ನಿಲ್ಲುವಂತೆ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು.&lt;/p&gt;&lt;p&gt;ಕುಷ್ಟಗಿ ಬೆಂಗಳೂರು ರೈಲು ಸೇವೆ ಹಾಗೂ ಕುಷ್ಟಗಿ ಹುಬ್ಬಳ್ಳಿ ಇನ್ನೊಂದು ರೈಲು ಸೇವೆ ಜತೆಗೆ ಕುಷ್ಟಗಿ ರೈಲು ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯ ಕುರಿತು ಕೊಪ್ಪಳ ಸಂಸದರು ಒತ್ತಾಯಿಸಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತುರ್ತು ಸಭೆ ಮಾಡಿ ಸಾಧಕ ಭಾಧಕ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಬೇಲಾಮೀನಾ ತಿಳಿಸಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/demand-mounts-to-extend-bengaluru-hubballi-superfast-express-to-kushtagi-gdp-kiasa7k"/>
        </item>
        <item>
            <title><![CDATA[ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ; ಜೊತೆಯಾಗಿಯೇ ಇಬ್ಬರ ಅಂತ್ಯಕ್ರಿಯೆ]]></title>
            <link>https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er</link>
            <guid isPermaLink="true">https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er</guid>
            <pubDate>Tue, 02 Jun 2026 08:13:00 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಚಿಕಿತ್ಸೆ ಕೊಡಿಸಿ ಮರಳುತ್ತಿದ್ದ ತಮ್ಮ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿದ ಆಘಾತಕ್ಕೆ ಅಕ್ಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt338n0exf5h3cdgm6q7gwnk,imgname-death-1780368036878.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವಿಜಯನಗರ/ಗದಗ: &lt;/strong&gt;ಅನಾರೋಗ್ಯದಿಂದ ಬಳಲುತ್ತಿದ್ದ ತನಗೆ (ಸಹೋದರಿ) ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಮರಳಿ ತೆರಳುವಾಗ ಬೈಕ್&zwnj; ಅಪಘಾತದಲ್ಲಿ ಸಹೋದರ ಮೃತಪಟ್ಟ ಘಟನೆಯ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತವಾಗಿ ಮೃತಪಟ್ಟ ದಾರುಣ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.&lt;/p&gt;&lt;p&gt;ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಮ್ಮ (48) ಮೃತ ಮಹಿಳೆ. ಇವರ ತಮ್ಮ ನಿಂಗಪ್ಪ ಇಲ್ಲಿನ ಜೆಸ್ಕಾಂ ಕಚೇರಿಯ ಲೈನ್&zwnj;ಮ್ಯಾನ್&zwnj; ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗದಗ: 101 ವರ್ಷ ಹಳೆಯ ಅಪರೂಪದ ಔಷಧಿ ಗುಣದ ಮಡ್ಡಿ ಮರ ಪತ್ತೆ; ಮಧುಮೇಹ ನಿಯಂತ್ರಣಕ್ಕೆ ರಾಮಬಾಣ&lt;/strong&gt;&lt;/p&gt;&lt;h2&gt;&lt;strong&gt;ಅಪಘಾತದಲ್ಲಿ ತಮ್ಮನ ಸಾವು&lt;/strong&gt;&lt;/h2&gt;&lt;p&gt;ಮಲ್ಲಮ್ಮ ಅನಾರೋಗ್ಯದಿಂದಾಗಿ ಕಳೆದೊಂದು ವಾರದಿಂದ ರಜೆ ಪಡೆದಿದ್ದರು. ಅವರನ್ನು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬೂದಿಹಾಳದಲ್ಲಿ ಬಿಟ್ಟು ಬರುವಾಗ ತಾಲೂಕಿನ ಕಾಗನೂರು ಬಳಿ ನಿಂಗಪ್ಪನ ಬೈಕ್&zwnj;ಗೆ ನಾಯಿಯೊಂದು ಅಡ್ಡ ಬಂದು ಬೈಕ್ ಅಪಘಾತವಾಗಿ ಅಸುನೀಗಿದರು. ಸಹೋದರ ಮೃತಪಟ್ಟ ಸುದ್ದಿ ತಿಳಿದ ಕೂಡಲೇ ಮಲ್ಲಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರ ಅಂತ್ಯಕ್ರಿಯೆ ಬೂದಿಹಾಳದಲ್ಲಿ ಭಾನುವಾರ ನಡೆಯಿತು.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Gadag: ಅಪಾಯದಂಚಿನ ಮಾರ್ಗ: ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/vijayanagar-gadag-sister-also-has-heart-attack-after-hearing-news-of-her-brother-s-death-both-are-cremated-together-mrq/articleshow-lakd8er"/>
        </item>
        <item>
            <title><![CDATA[ವಿಂಡ್ ಫ್ಯಾನ್, ಸೋಲಾರ್ ಆದಾಯ ರೈತರಿಗೆ ಸಿಕ್ಕರೆ ಗದಗ ದೇಶದಲ್ಲೇ ನಂ.1: ಸಚಿವ ಎಚ್.ಕೆ.ಪಾಟೀಲ]]></title>
            <link>https://kannada.asianetnews.com/karnataka-districts/gadag-gdp-growth-hk-patil-wind-solar-income-farmers-gvd/articleshow-mg4w613</link>
            <guid isPermaLink="true">https://kannada.asianetnews.com/karnataka-districts/gadag-gdp-growth-hk-patil-wind-solar-income-farmers-gvd/articleshow-mg4w613</guid>
            <pubDate>Tue, 26 May 2026 19:45:48 +0530</pubDate>
            <description><![CDATA[&lt;p&gt;ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಜಿಲ್ಲೆಗಳ ನೈಸರ್ಗಿಕ ಸಂಪನ್ಮೂಲಗಳಿಂದ ಸಿಗುವ ಆದಾಯ ಸ್ಥಳೀಯ ರೈತರಿಗೆ ದೊರೆತಿಲ್ಲ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpa1nj39qnqjbg1k3cs1nfvn,imgname-----------------------2026-04-16t075418.441-1776306276457.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮೇ.26):&lt;/strong&gt; ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಜಿಲ್ಲೆಗಳ ನೈಸರ್ಗಿಕ ಸಂಪನ್ಮೂಲಗಳಿಂದ ಸಿಗುವ ಆದಾಯ ಸ್ಥಳೀಯ ರೈತರಿಗೆ ದೊರೆತಿಲ್ಲ. ಜಿಲ್ಲೆಯಲ್ಲಿರುವ ವಿಂಡ್ ಫ್ಯಾನ್ ಹಾಗೂ ಸೋಲಾರ್ ವಿದ್ಯುತ್ ಘಟಕಗಳಿಂದ ಲಭಿಸುವ ಆದಾಯ ರೈತರಿಗೆ ಸಿಗುವಂತಾದರೆ ಜಿಲ್ಲೆಯ ಜಿಡಿಪಿ ದೇಶದಲ್ಲೇ 5 ಅಥವಾ 6ನೇ ಸ್ಥಾನಕ್ಕೆ ಏರಿಕೆಯಾಗುವ ಸಾಮರ್ಥ್ಯ ಹೊಂದಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.&lt;/p&gt;&lt;p&gt;ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಸಮಿತಿ ಹಾಗೂ 2027- 28ನೇ ಸಾಲಿನ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಜನರ ಯೋಜನೆ ರೂಪಿಸುವ ಕುರಿತು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಅಭಿವೃದ್ಧಿ ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಗದಗ ಹೆಸರು ಇಲ್ಲದಿರಬಹುದು. ಆದರೆ ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಗಳಲ್ಲಿ ಸಾಲಿನಲ್ಲಿ ಗದಗ ಜಿಲ್ಲೆ ನಂಬರ್ 1 ಸ್ಥಾನದಲ್ಲಿರಲಿದೆ ಎಂದರು.&lt;/p&gt;&lt;h2&gt;&lt;strong&gt;ದೊಡ್ಡ ಉತ್ತೇಜನ&lt;/strong&gt;&lt;/h2&gt;&lt;p&gt;ಸಭೆಯಲ್ಲಿ ಜಲತಜ್ಞ ರಾಜೇಂದ್ರ ಸಿಂಗ್ ಮಾತನಾಡಿ, 1992ರ ಮೊದಲು ದೇಶದಲ್ಲಿ ಪರಿಸರ ಹಾಗೂ ಸಂಸ್ಕೃತಿಯನ್ನು ಒಳಗೊಂಡ ಅಭಿವೃದ್ಧಿ ಮಾದರಿ ಇತ್ತು. ಈಗ ಅಭಿವೃದ್ಧಿ ಎಂಬುದು ಕೇವಲ ಮೂಲ ಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ರಾಜಸ್ಥಾನದ ಅನೇಕ ಜಿಲ್ಲೆಗಳಿಗಿಂತ ಗದಗ ಭಾಗದಲ್ಲಿ ಮಳೆಯ ಪ್ರಮಾಣ ಉತ್ತಮವಾಗಿದೆ. ಹೀಗಾಗಿ ಇಲ್ಲಿನ ಮಣ್ಣು ಹಾಗೂ ನೀರನ್ನು ಸಂರಕ್ಷಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗುತ್ತದೆ ಎಂದರು.&lt;/p&gt;&lt;p&gt;ಸಿರಿಧಾನ್ಯಗಳ ಮಹತ್ವ ಕುರಿತು ಮಾತನಾಡಿದ ಡಾ. ಖಾದರ ಅವರು, ಜನರಿಗೆ ಅಕ್ಕಿ ನೀಡುವ ಬಗ್ಗೆ ಮಾತ್ರ ಸರ್ಕಾರಗಳು ಯೋಚಿಸುತ್ತಿವೆ. ಆದರೆ ಅಕ್ಕಿ ಬೆಳೆಯುವ ಮಣ್ಣಿನ ಸಂರಕ್ಷಣೆ ಕುರಿತು ಚರ್ಚೆಯಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಹಸಿರು ಕ್ರಾಂತಿಯ ನಂತರ ವಿಶ್ವದ ಶೇ. 42ರಷ್ಟು ಭೂಮಿ ಬರಡಾಗಿದೆ. ಕಾರ್ಪೊರೇಟ್ ಕಂಪನಿಗಳ ಪ್ರಭಾವದಿಂದ ಕರ್ನಾಟಕದಲ್ಲಿ ಪಂಜಾಬ್&zwnj;ಗಿಂತಲೂ ಹೆಚ್ಚು ಗೋದಿ ಸೇವನೆ ನಡೆಯುತ್ತಿದೆ ಎಂದ ಅವರು, ನಮ್ಮ ಆಹಾರವನ್ನು ನಾವೇ ಬೆಳೆದು ಸೇವಿಸುವಂತಾದಾಗ ಮಾತ್ರ ಸ್ವಾಭಿಮಾನಿ ಬದುಕು ಸಾಧ್ಯ. ಇದರಿಂದ ನಾವು ರೋಗ ಮುಕ್ತರಾಗಲು ಕೂಡಾ ಸಾಧ್ಯವಿದೆ. ವೈದ್ಯರು, ಔಷಧ ಗುಳಿಗೆಗಳಿಗೆ ಖರ್ಚು ಮಾಡುವ ಹಣವೆಲ್ಲ ಉಳಿಯುತ್ತದೆ ಎಂದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/gadag-gdp-growth-hk-patil-wind-solar-income-farmers-gvd/articleshow-mg4w613"/>
        </item>
        <item>
            <title><![CDATA[Gadag: ಬಟ್ಟೆ ತೊಳೆಯಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಲಕ್ಷ್ಮವ್ವ, ಮುತ್ತವ್ವ ಸಾವು]]></title>
            <link>https://kannada.asianetnews.com/gallery/karnataka-districts/gadag-lakshmava-and-muthava-died-after-falling-into-a-farm-pit-while-washing-clothes-in-timmapur-village-mrq-ou8adfg</link>
            <guid isPermaLink="true">https://kannada.asianetnews.com/gallery/karnataka-districts/gadag-lakshmava-and-muthava-died-after-falling-into-a-farm-pit-while-washing-clothes-in-timmapur-village-mrq-ou8adfg</guid>
            <pubDate>Wed, 20 May 2026 07:47:08 +0530</pubDate>
            <description><![CDATA[ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ, ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಲಕ್ಷ್ಮವ್ವ (15) ಮತ್ತು ಮುತ್ತವ್ವ (8) ಮೃತಪಟ್ಟಿದ್ದು, ಈ ಹೃದಯವಿದ್ರಾವಕ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ks1jen4fqexq17md9gwh3cpx,imgname-gadag-death--1--1779243111567.jpg" type="image/jpeg" height="390" width="690"/>
            <content:encoded><![CDATA[ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ, ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಲಕ್ಷ್ಮವ್ವ (15) ಮತ್ತು ಮುತ್ತವ್ವ (8) ಮೃತಪಟ್ಟಿದ್ದು, ಈ ಹೃದಯವಿದ್ರಾವಕ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.&lt;img&gt;&lt;p&gt;ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗದಗ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಲಕ್ಷ್ಮವ್ವ ಹರಣಶಿಕಾರಿ(15), ಮುತ್ತವ್ವ ಹರಣಶಿಕಾರಿ(8) ಎಂದು ಗುರುತಿಸಲಾಗಿದೆ.&lt;/p&gt;&lt;img&gt;&lt;p&gt;ಗ್ರಾಮದ ಕೆರೆಯಲ್ಲಿ ನೀರು ಇಲ್ಲದ ಕಾರಣ ಲಕ್ಷ್ಮವ್ವ ಮತ್ತು ಮುತ್ತವ್ವ ಜೊತೆಯಾಗಿ ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದರು. ಗ್ರಾಮದ ಹೊರವಲಯದ ತಿಮ್ಮಾಪೂರ-ಯರೇಹಂಚಿನಾಳ ರಸ್ತೆಯಲ್ಲಿರುವ ಕೃಷಿಹೊಂಡದಲ್ಲಿ ಇಬ್ಬರು ಆಯತಪ್ಪಿ ಬಿದ್ದಿದ್ದಾರೆ.&lt;/p&gt;&lt;img&gt;&lt;p&gt;ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರೇ ಕೃಷಿಹೊಂಡಕ್ಕೆ ಇಳಿದು ಇಬ್ಬರು ಬಾಲಕಿಯರ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಕೃಷಿಹೊಂಡದ ಬಳಿ ತಿಮ್ಮಾಪೂರ ಗ್ರಾಮಸ್ಥರು ನೆರೆದಿದ್ದು, ಕುಟುಂಬಸ್ಥರು ಶವಗಳನ್ನು ಬಿಗಿದಪ್ಪಿಕೊಂಡು ಕಣ್ಣೀರು ಹಾಕುತ್ತಿದ್ದು, ಇಡೀ ಊರಿಗೆ ಊರೇ ಮೌನವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಮನಿಸಿ, ಮೇ 20 ರಿಂದ ಜೂನ್ 2ರವರೆಗೆ ಮಂಗಳೂರಿನಿಂದ ಹೊರಡುವ ಎಲ್ಲಾ ರೈಲುಗಳ ಸಂಚಾರ ಮಾರ್ಗದಲ್ಲಿ ಭಾರೀ ಬದಲಾವಣೆ!&lt;/strong&gt;&lt;/p&gt;&lt;img&gt;&lt;p&gt;ಸ್ಥಳಕ್ಕೆ ಕೊಪ್ಪಳ ಜಿಲ್ಲೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು. ಬಾಲಕಿಯರು ಹೇಗೆ ಕೃಷಿಹೊಂಡಕ್ಕೆ ಬಿದ್ರು ಎಂಬುದರ ಬಗ್ಗೆ ಸ್ಪಷ್ಟತೆ ಲಭ್ಯವಾಗಿಲ್ಲ. ಈ ಸಂಬಂಧ ಪೊಲೀಸರು ಕುಟುಂಬಸ್ಥರು ಮತ್ತು ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;NRI arrested in Bangalore: ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದ ಅನಿವಾಸಿ ಭಾರತೀಯನ ಸೆರೆ!&lt;/strong&gt;&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/gadag-lakshmava-and-muthava-died-after-falling-into-a-farm-pit-while-washing-clothes-in-timmapur-village-mrq-ou8adfg"/>
        </item>
        <item>
            <title><![CDATA[ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?]]></title>
            <link>https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd</link>
            <guid isPermaLink="true">https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd</guid>
            <pubDate>Sat, 16 May 2026 14:16:26 +0530</pubDate>
            <description><![CDATA[&lt;p&gt;ಬೆಂಗಳೂರು-ವಿಜಯಪುರ ನಡುವೆ ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ವಿಜಯಪುರ ಜನರಿಗೆ ಸಂತಸ ತಂದಿದೆ. ಆದರೆ, ಈ ರೈಲು ಗದಗ ನಗರವನ್ನು ಪ್ರವೇಶಿಸದ ಕಾರಣ ಅಲ್ಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqz254sqjza3j6qkjn1em82,imgname-yeshwanthpur--1--1778920789145.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು-ವಿಜಯಪುರ ನಡುವೆ ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ವಿಜಯಪುರ ಜನರಿಗೆ ಸಂತಸ ತಂದಿದೆ. ಆದರೆ, ಈ ರೈಲು ಗದಗ ನಗರವನ್ನು ಪ್ರವೇಶಿಸದ ಕಾರಣ ಅಲ್ಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.&amp;nbsp;&lt;/p&gt;&lt;img&gt;&lt;p&gt;ಗುಮ್ಮಟ ನಗರಿ ವಿಜಯಪುರ ಜನತೆಯ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದೆ. ಇದೀಗ ಈ ರೈಲಿಗೆ ಗದಗ ಜನತೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಬೈಪಾಸ್ ಮೂಲಕ ರೈಲು ಸಂಚಾರಕ್ಕೆ ಗದಗ ಜನತೆ ಬೇಸರ ವ್ಯಕ್ತಪಡಿಸಿಕೊಂಡು ಬರುತ್ತಿದ್ದಾರೆ. ಈ ಬೇಸರಕ್ಕೆ ಗದಗ ಜನತೆ ತಮ್ಮದೇ ಆದ ಕೆಲವು ಕಾರಣಗಳನ್ನು ನೀಡುತ್ತಾರೆ.&lt;/p&gt;&lt;img&gt;&lt;p&gt;ನಮ್ಮ ಗದಗ ಜನತೆ ಗದಗ ಬೈಪಾಸ್ ರೈಲು ನಿಲ್ದಾಣ ತಲುಪಲು 300 ರೂಪಾಯಿ ಅಟೋ ಚಾರ್ಜ್ ಭರಿಸಬೆಕು , ಗದಗ ಜನೆತೆಗೆ ಅವಕಾಶ ವಂಚನೆ ಮಾಡಿದ ನೈಋತ್ಯ ರೈಲ್ವೆಯ ಅಧಿಕಾರಿಗಳು , ಇದರ ಬಗ್ಗೆ ಶಾಸಕರು ಹಾಗೂ ಸಂಸದರು ಈಗಲಾದರೂ ಗದಗ್ ಜನತೆಯ ಬಗ್ಗೆ ಧ್ವನಿ ಎತ್ತಿ ಗದಗ ಜನತೆಯ ಋಣ ತೀರಿಸಿ ಎಂದು ಆಗ್ರಹಿಸಿದ್ದಾರೆ. ಈ ಟ್ವೀಟ್&zwnj;ನನ್ನು ಸಂಸದರಾ ಬಸವರಾಜ್ ಬೊಮ್ಮಾಯಿ ಮತ್ತು ಸಚಿವ ಹೆಚ್&zwnj;.ಕೆ.ಪಾಟೀಲ್&zwnj; ಅವರಿಗೆ ಟ್ಯಾಗ್ ಮಾಡಲಾಗಿದೆ.&lt;/p&gt;&lt;img&gt;&lt;p&gt;ವೈರಲ್ ಆಗಿರುವ ಪೋಸ್ಟ್&zwnj;ಗೆ ಪ್ರತಿಕ್ರಿಯಿಸಿರುವ ಅಶೋಕ್ ಹಳ್ಳೂರು ಎಂಬವರು, ಸಾಹುಕಾರ್, ಈ ಟ್ರೈನ್ ಗೆ ಬರಬೇಕು ಅಂತ ನಿಮಗ್ಯಾಕೆ ಹಠ? ಬೇರೆ ಟ್ರೈನ್ ಹತ್ತಿ ಬರ್ರೀ, ಹತ್ತು ಹನ್ನೆರಡು ಟ್ರೈನ್ ಇದ್ರೂ ವಿಜಾಪುರ ಗಾಡಿನೇ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಗದಗ ಕಣಗಿನಹಾಳು ನಡುವೆ ಒಂದು ಬೈಪಾಸ್ ರೈಲು ಹಳಿ ಹೊಂಬಾಳ ರೈಲು ನಿಲ್ದಾಣಕ್ಕೆ ಹೊಸದಾಗಿ ನಿರ್ಮಾಣ ಮಾಡಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಆದರೆ ಇವರುಗಳು ಅದನ್ನು ಕೇಳುವುದನ್ನು ಬಿಟ್ಟು ಪ್ರತಿ ಸಾರಿ ಏಕೆ ಗದಗ್ ಬೈಪಾಸ್ ಮೂಲಕ ಟ್ರೈನ್ ಗಳು ಹೋಗುತ್ತದೆ ಎಂದು ಬಡಿದಾಡುತ್ತಾರೆ ಎಂದು ಮತ್ತೋರ್ವ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರು ಅಥವಾ ಯಶವಂತಪುರ ನಿಲ್ದಾಣದಿಂದ ವಿಜಯಪುರಕ್ಕೆ ಹೊರಡುವ ರೈಲುಗಳು ಗದಗ ಬೈಪಾಸ್ ಮೂಲಕ ಚಲಿಸಿದ್ರೆ ಐದು ಗಂಟೆ ಸಮಯ ಉಳಿತಾಯವಾಗುತ್ತದೆ. ಈ ಮಾರ್ಗದಿಂದ ಚಲಿಸಿದ್ರೆ ಹುಬ್ಬಳ್ಳಿ ಮತ್ತು ಗದಗ ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಿಸುವ ಸಮಯ ಉಳಿತಾಯವಾಗುತ್ತದೆ. ಅನತ್ಯವಾಗಿ ಹುಬ್ಬಳ್ಳಿಗೆ ಹೋಗುವುದು ಸಹ ತಪ್ಪಲಿದೆ.&lt;/p&gt;&lt;img&gt;&lt;p&gt;ಯಶವಂತಪುರ ಜಂಕ್ಷನ್, ತುಮಕೂರು, ಅರಸಿಕೆರೆ ಜಂಕ್ಷನ್, ದಾವಣಗೆರೆ, ಎಸ್&zwnj;ಎಂಎಂ ಹಾವೇರಿ, ಗದಗ ಬೈಪಾಸ್, ಬದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿ ರೋಡ್ ಮೂಲಕ ವಿಜಯಪುರ ತಲುಪಲಿದೆ.&lt;/p&gt;&lt;p&gt;ನೂತನ ಬೈಪಾಸ್ ರೈಲಿಗೆ ಸಚಿವ ಎಂ.ಬಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿನ ದಿನಗಳಲ್ಲಿ ಕಾಯಂಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು ಗುಳೇದಗುಡ್ಡ ರೋಡ್ ನಿಲ್ದಾಣದಲ್ಲಿಯೂ ನಿಲುಗಡೆ ಕಲ್ಪಿಸಬೇಕು ಎಂಬ ಒತ್ತಾಯವೂ ಸಹ ಕೇಳಿ ಬಂದಿದೆ.&lt;/p&gt;&lt;p&gt;ನಮ್ಮ ಗದಗ ಜನತೆ ಗದಗ ಬೈಪಾಸ್ ರೈಲು ನಿಲ್ದಾಣ ತಲುಪಲು 300 ರೂಪಾಯಿ ಅಟೋ ಚಾರ್ಜ್ ಭರಿಸಬೆಕು , ಗದಗ ಜನೆತೆಗೆ ಅವಕಾಶ ವಂಚನೆ ಮಾಡಿದ @SWRRLY ಅಧಿಕಾರಿಗಳು , ಇದರ ಬಗ್ಗೆ ಶಾಸಕರು ಹಾಗೂ ಸಂಸದರು ಈಗಲಾದರೂ ಗದಗ್ ಜನತೆಯ ಬಗ್ಗೆ ಧ್ವನಿ ಎತ್ತಿ ಗದಗ ಜನತೆಯ ಋಣ ತಿರಿಸಿ @HKPatilINC @BSBommai pic.twitter.com/vDesnjuKcg&lt;/p&gt;&lt;p&gt;&mdash; ಗದಗ ರೈಲು ಬಳಕೆದಾರರು Gadag Railway Users (@GadagRailUsers) May 16, 2026&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd"/>
        </item>
        <item>
            <title><![CDATA[ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ: ಸ್ಯಾಟಲೈಟ್ ಕಣ್ಣಲ್ಲಿ ನೂರೊಂದು ದೇಗುಲಗಳ ಹುಡುಕಾಟ!]]></title>
            <link>https://kannada.asianetnews.com/gallery/karnataka-districts/state-government-seeks-advice-from-isro-scientists-to-locate-62-lost-temples-and-wells-in-lakkundi-village-gadag-mrq-ue7y9op</link>
            <guid isPermaLink="true">https://kannada.asianetnews.com/gallery/karnataka-districts/state-government-seeks-advice-from-isro-scientists-to-locate-62-lost-temples-and-wells-in-lakkundi-village-gadag-mrq-ue7y9op</guid>
            <pubDate>Wed, 20 May 2026 15:29:59 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. &amp;nbsp;ಇತ್ತೀಚೆಗೆ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲೊಂದು ಪತ್ತೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks2cw68nfsa0xb3f8yagm79y,imgname-lakkundi-isro-1779270818069.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. &amp;nbsp;ಇತ್ತೀಚೆಗೆ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲೊಂದು ಪತ್ತೆಯಾಗಿದೆ.&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿ ಉತ್ಖನನಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಲಾಯ್ತು. ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ಇಸ್ರೋ ವಿಜ್ಞಾನಿಗಳು ಭಾಗಿಯಾಗಿದ್ದರು. ಸಚಿವ ಹೆಚ್ ಕೆ ಪಾಟೀಲ್ ಅವರು ಸ್ಯಾಟಲೈಟ್ ಇಮೇಜಿಂಗ್ ತಂತ್ರಜ್ಞಾನದ ಬಗ್ಗೆ ಸಚಿವ ಹೆಚ್&zwnj; ಕೆ ಪಾಟೀಲ್ ಮಾಹಿತಿ ಪಡೆದುಕೊಂಡಿದ್ದಾರೆ.&lt;/p&gt;&lt;img&gt;&lt;p&gt;ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಲಕ್ಕುಂಡಿಯಲ್ಲಿ ನೂರೊಂದು ಬಾವಿ, ನೂರೊಂದು ದೇವಾಲಯಗಳ ಹುಡುಕಾಟ ನಡೆಯುತ್ತಿದೆ. ರಾಜ್ಯ ಸರ್ಕಾರ ಬಹಳ ಆಸಕ್ತಿ ವಹಿಸಿ ಉತ್ಖನನ ಮಾಡುತ್ತಿದೆ. ಲಕ್ಕುಂಡಿ ಗ್ರಾಮದಲ್ಲಿರುವ ಬಾವಿ, ದೇವಾಲಗಳ ಹುಡುಕಾಟಕ್ಕೆ ತಂತ್ರಜ್ಞಾನ ಬಳಕೆ ಮಾಡಬೇಕು. ಹಾಗಾಗಿ ಇಂದಿನ ಸಭೆಯಲ್ಲಿ ಇಸ್ರೋದ ತಜ್ಞರ ಸಲಹೆ ಪಡೆದಿದ್ದೇವೆ. ಇಸ್ರೋದ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವ್ರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.&lt;/p&gt;&lt;img&gt;&lt;p&gt;ದೇವಾಲಯ, ಬಾವಿಗಳ ಹುಡುಕಾಟಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಕೆ ಮಾಡುತ್ತೇವೆ. ಈಗ 38 ಬಾವಿ ದೇವಾಲಯ ಪತ್ತೆ ಹಚ್ಚಿದ್ದೇವೆ. ಇನ್ನು 62 ದೇವಾಲಯ ಹುಡುಕಬೇಕಿದೆ ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು. ಲಕ್ಕುಂಡಿ ಉತ್ಖನನಕ್ಕೆ ಡಿಸೆಂಬರ್ ವರೆಗೆ ಗಡುವು ನೀಡಲಾಗಿದೆ.&lt;/p&gt;&lt;img&gt;&lt;p&gt;​ಇತ್ತೀಚಿನ ಉತ್ಖನನದ ವೇಳೆ ಲಕ್ಕುಂಡಿಯ ಕುಂಬಾರ ಬಾವಿಯ ಬಳಿ 9- 10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅತ್ಯಂತ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಇದು ಕೇವಲ ಕಲ್ಲಲ್ಲ, ಅಂದಿನ ಶೌರ್ಯ ಮತ್ತು ಸಂಸ್ಕೃತಿಯ ಜೀವಂತ ಸಾಕ್ಷಿಯಾಗಿವೆ. ಈ ವೀರಗಲ್ಲು ನಾಲ್ಕು ಹಂತದ ಕೆತ್ತನೆಗಳನ್ನು ಹೊಂದಿದೆ. ಕೆಳಗಿನ ಪಟ್ಟಿಕೆಯಲ್ಲಿ ಯುದ್ಧದ ದೃಶ್ಯವಿದ್ದು (ಮಣ್ಣಿನಲ್ಲಿ ಹೂತಿದೆ), ಎರಡನೇ ಪಟ್ಟಿಕೆಯಲ್ಲಿ ಅಪ್ಸರೆಯರು ವೀರನನ್ನು ಸ್ವರ್ಗಕ್ಕೆ ಕರೆದೊಯ್ಯುತ್ತಿರುವ ಮನಮೋಹಕ ದೃಶ್ಯವಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ&lt;/strong&gt;&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ ಲಕ್ಕುಂಡಿಯು ಕೇವಲ ಗದಗ ಜಿಲ್ಲೆಯ ಹೆಮ್ಮೆಯಷ್ಟೇ ಅಲ್ಲದೆ, ಭಾರತದ ಸಾಂಸ್ಕೃತಿಕ ಭೂಪಟದಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಈಗ ಇತಿಹಾಸದ ಕಥೆ ಹೇಳುತ್ತಿದ್ದು, ಪ್ರವಾಸಿಗರನ್ನು ಹಾಗೂ ಸಂಶೋಧಕರನ್ನು ಕೈಬೀಸಿ ಕರೆಯುತ್ತಿದೆ. ಇಲ್ಲಿನ ಮಣ್ಣಿನ ಹುದುಗಿ ಹೋಗಿರುವ ಇತಿಹಾಸ ಅಗೆದಷ್ಟು ಆಳಕ್ಕಿಳಿಯುತ್ತಿದೆ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿ ಚಿನ್ನದ ನಿಧಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್​: ಇದು ಎಂಟು ಕೋಟಿಯ ರಹಸ್ಯ! 2 ತಿಂಗಳ ಬಳಿಕ ನಡೆದದ್ದೇನು?&lt;/strong&gt;&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/state-government-seeks-advice-from-isro-scientists-to-locate-62-lost-temples-and-wells-in-lakkundi-village-gadag-mrq-ue7y9op"/>
        </item>
        <item>
            <title><![CDATA[ಲಕ್ಕುಂಡಿಯ ಗುಪ್ತ ಸತ್ಯ: ದೇವಾಲಯಗಳ ಪತ್ತೆಗೆ ಸ್ಯಾಟಲೈಟ್ ಬಳಕೆ, ಲಕ್ಕುಂಡಿಯ ನೂರೊಂದು ಬಾವಿ, ದೇಗುಲ ಶೀಘ್ರ ಅನಾವರಣ]]></title>
            <link>https://kannada.asianetnews.com/gallery/karnataka-districts/lakkundi-unesco-world-heritage-bid-nias-and-isro-to-help-discover-missing-heritage-sites-gdp-xdm2bd3</link>
            <guid isPermaLink="true">https://kannada.asianetnews.com/gallery/karnataka-districts/lakkundi-unesco-world-heritage-bid-nias-and-isro-to-help-discover-missing-heritage-sites-gdp-xdm2bd3</guid>
            <pubDate>Thu, 21 May 2026 15:56:27 +0530</pubDate>
            <description><![CDATA[&lt;p&gt;ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ಮತ್ತು ನೂರೊಂದು ದೇವಾಲಯಗಳನ್ನು ಪತ್ತೆಹಚ್ಚಲು ಎನ್&zwnj;ಐಎಎಸ್&zwnj; ಸಂಸ್ಥೆಯ ಸಹಕಾರದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಈ ಸ್ಥಳವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kra8nj8dqh72cgqsvbsw1cpm,imgname-lakkundi-1778461100301.jpg" type="image/jpeg" height="390" width="690"/>
            <content:encoded><![CDATA[&lt;p&gt;ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ಮತ್ತು ನೂರೊಂದು ದೇವಾಲಯಗಳನ್ನು ಪತ್ತೆಹಚ್ಚಲು ಎನ್&zwnj;ಐಎಎಸ್&zwnj; ಸಂಸ್ಥೆಯ ಸಹಕಾರದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಈ ಸ್ಥಳವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ.&lt;/p&gt;&lt;img&gt;&lt;p&gt;ಗದಗ/ಬೆಂಗಳೂರು: ಐತಿಹಾಸಿಕ ಲಕ್ಕುಂಡಿಯಲ್ಲಿ ಇರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ ಎನ್&zwnj;ಐಎಎಸ್&zwnj; ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ ಅನಾವರಣಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.&lt;/p&gt;&lt;img&gt;&lt;p&gt;ಬೆಂಗಳೂರಿನ ವಿಧಾನಸೌಧದಲ್ಲಿ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ನೂರೊಂದು ದೇವಾಲಯಗಳನ್ನು ಹೊರತರುವ ಸಲುವಾಗಿ ಎನ್&zwnj;ಐಎಎಸ್&zwnj; ಸಂಸ್ಥೆ ವಿಜ್ಞಾನಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 2023ರಿಂದ ಲಕ್ಕುಂಡಿಯಲ್ಲಿ 32 ದೇವಾಲಯಗಳು, 28 ಬಾವಿಗಳು ಹಾಗೂ 7 ಇತರೆ ಸ್ಮಾರಕಗಳನ್ನು ಒಳಗೊಂಡಂತೆ ಒಟ್ಟು 70ಕ್ಕೂ ಹೆಚ್ಚು ಸ್ಮಾರಕಗಳನ್ನು ಗುರುತಿಸಲಾಗಿದೆ. ಮುಂಬರುವ ಡಿ. 31ರೊಳಗೆ ಲಕ್ಕುಂಡಿಯಲ್ಲಿ 101 ಬಾವಿ 101 ದೇವಾಲಯಗಳನ್ನು ಎನ್&zwnj;ಐಎಎಸ್&zwnj; ಸಂಸ್ಥೆ ಹಾಗೂ ಸ್ಥಳೀಯರ ಸಹಭಾಗಿತ್ವದೊಂದಿಗೆ ಅನಾವರಣಗೊಳಿಸಲು ಅಗತ್ಯ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.&lt;/p&gt;&lt;img&gt;&lt;p&gt;ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ(ಯುನೆಸ್ಕೋ) ಸೇರಿಸಲು ಪ್ರಸ್ತಾವನೆ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಯುನೆಸ್ಕೋ ಪಟ್ಟಿಗೆ ಸೇರಿಸಲು 2024ರ ನವೆಂಬರ್&zwnj;ನಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 1ನ್ನು ನಡೆಸಿ 1500ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಲಾಗಿದೆ. ಜತೆಗೆ 2026ರ ಮೇ 2ರಿಂದ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 2 ನಡೆಸುತ್ತಿದ್ದು, ಈಗಾಗಲೇ ಎರಡನೇ ಹಂತದಲ್ಲಿ 1800ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿವೆ. ಮೊದಲ ಹಂತ ಮತ್ತು ಎರಡನೇ ಹಂತದ ಪ್ರಾಚ್ಯಾವಶೇಷಗಳನ್ನು ಸೇರಿಸಿ ಜೂ. 30ರ ಒಳಗಾಗಿ ದಾಖಲೆಯ ರೀತಿಯ 5000ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಿ ಅವುಗಳನ್ನು ಬಯಲು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಸಹ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.&lt;/p&gt;&lt;img&gt;&lt;p&gt;ಲಕ್ಕುಂಡಿಯಲ್ಲಿರುವ ದೇವಸ್ಥಾನಗಳಿಗೆ ಹೊಸ ರೂಪ ನೀಡಲು ಈಗಾಗಲೇ ಫೆಬ್ರವರಿ ಮಾಹೆಯಲ್ಲಿ ಪಂಚ ದೇವಾಲಯ ಮತ್ತು ಪಂಚ ಬಾವಿಗಳ ಅನಾವರಣ ಕೈಗೊಂಡಿದ್ದು, ಮೇ 2ರಿಂದ ದಶಬಾವಿ, ದಶ ದೇವಾಲಯಗಳ ಅನಾವರಣ ಕಾರ್ಯವೂ ನಡೆಯುತ್ತಿದ್ದು, ₹10 ಕೋಟಿ ವೆಚ್ಚದಲ್ಲಿ 6 ಸ್ಮಾರಕಗಳನ್ನು ಸಂಪೂರ್ಣವಾಗಿ ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. 2026- 27ನೇ ಸಾಲಿನ ಕ್ರಿಯಾಯೋಜನೆಯಲ್ಲಿ 10ಕ್ಕಿಂತ ಹೆಚ್ಚು ಸ್ಮಾರಕಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಲಾಗುವುದು. ಒಟ್ಟಾರೆಯಾಗಿ ಲಕ್ಕುಂಡಿಯನ್ನು ವಿಶ್ವಮಟ್ಟದಲ್ಲಿ ಗುರುತಿಸುವ ಕಾರ್ಯಕ್ಕೆ(ಯುನೆಸ್ಕೋ ಪಟ್ಟಿಗೆ ಸೇರಿಸಲು) ಮತ್ತಷ್ಟು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.&lt;/p&gt;&lt;img&gt;&lt;p&gt;ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ ಕುಮಾರ್ ಮಾತನಾಡಿ, ಲಕ್ಕುಂಡಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗುವುದು ಅಗತ್ಯವಾಗಿದೆ. ಆ ದಿಸೆಯಲಿ ಪ್ರಯತ್ನ ಸ್ವಾಗತಾರ್ಹ. ಸ್ಯಾಟಲೈಟ್ ತಂತ್ರಜ್ಞಾನ ಬಳಸಿ ಲಕ್ಕುಂಡಿಯಲ್ಲಿರುವ 101 ಬಾವಿ ಹಾಗೂ 101 ದೇವಾಲಯಗಳನ್ನು ಅನಾವರಣಗೊಳಿಸುವ ಪ್ರಯತ್ನಕ್ಕೆ ಕೈಜೊಡಿಸುವುದಾಗಿ ತಿಳಿಸಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದಲಿಂಗೇಶ್ವರ ಪಾಟೀಲ ಮಾತನಾಡಿ, ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರಿಸಲು ಪ್ರವಾಸೋದ್ಯಮ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಕೈಗೊಂಡಿರುವ ಎಲ್ಲ ಕಾರ್ಯಗಳಿಗೆ ಸ್ಥಳೀಯರ ಸಂಪೂರ್ಣ ಸಹಕಾರವಿದೆ ಎಂದರು.&lt;/p&gt;&lt;img&gt;&lt;p&gt;ಸಭೆಯಲ್ಲಿ 2023ರಿಂದ ಇಲ್ಲಿಯವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಕುರಿತು ಪ್ರಾಧಿಕಾರದ ಆಯುಕ್ತ ಡಾ: ಶರಣು ಗೋಗೇರಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. 101 ಬಾವಿ 101 ದೇವಾಲಯಗಳನ್ನು ಪತ್ತೆ ಹಚ್ಚುವಲ್ಲಿ ಸ್ಯಾಟಲೈಟ್ ತಂತ್ರಜ್ಞಾನದ ಬಳಕೆ ಕುರಿತು ಎನ್&zwnj;ಐಎಎಸ್&zwnj; ಸಂಸ್ಥೆಯ ಪ್ರೊ. ಎಂ.ಬಿ. ರಜನಿ ಪ್ರಾತ್ಯಕ್ಷಿಕೆ ನೀಡಿದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಪ್ರವಾಸೋದ್ಯಮ ಇಲಾಖೆ ಆಯುಕ್ತ ಅಕ್ರಂ ಪಾಷಾ, ಇಸ್ರೋದ ವಿಜ್ಞಾನಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರೊ. ರಾಮನಗೌಡ ನಾಡಗೌಡರ, ಅ.ಧ. ಕಟ್ಟಿಮನಿ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ. ಆರ್. ಶೇಜೇಶ್ವರ, ಸ್ಮಿತಾ ರೆಡ್ಡಿ ಸೇರಿದಂತೆ ಇಸ್ರೋ ಹಾಗೂ ಎನ್&zwnj;ಐಎಎಸ್&zwnj; ಸಂಸ್ಥೆಯ ವಿಜ್ಞಾನಿಗಳು, ಸಂಶೋಧಕರು ಸೇರಿದಂತೆ ಮೊದಲಾದವರು ಇದ್ದರು.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/karnataka-districts/lakkundi-unesco-world-heritage-bid-nias-and-isro-to-help-discover-missing-heritage-sites-gdp-xdm2bd3"/>
        </item>
        <item>
            <title><![CDATA[ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!]]></title>
            <link>https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha</link>
            <guid isPermaLink="true">https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha</guid>
            <pubDate>Mon, 18 May 2026 13:25:38 +0530</pubDate>
            <description><![CDATA[ಕಳೆದ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಉತ್ತಮ ಮಳೆಯಾಗಿದ್ದು, ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ 82.4 ಮಿಮೀ ದಾಖಲೆ ಮಳೆಯಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲೂ ವರುಣನ ಸಿಂಚನವಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6wag915g31p9ppzq2qzgx,imgname-screenshot-2026-05-17-195924-1779029649929.png" type="image/jpeg" height="390" width="690"/>
            <content:encoded><![CDATA[ಕಳೆದ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಉತ್ತಮ ಮಳೆಯಾಗಿದ್ದು, ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ 82.4 ಮಿಮೀ ದಾಖಲೆ ಮಳೆಯಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲೂ ವರುಣನ ಸಿಂಚನವಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.&lt;img&gt;&lt;p&gt;&lt;strong&gt;ಬೆಂಗಳೂರು (ಮೇ 18): ರಾ&lt;/strong&gt;ಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣ ದೇವ ತಂಪೆರೆದಿದ್ದಾನೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ಬೆಂಗಳೂರು ಹವಾಮಾನ ಕೇಂದ್ರ (IMD) ಮಾಹಿತಿ ನೀಡಿದೆ. ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ಉತ್ತರ ಒಳನಾಡಿನ ಗದಗ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಗದಗ ವೀಕ್ಷಣಾಲಯದಲ್ಲಿ ಬರೊಬ್ಬರಿ 82.4 ಮಿಮೀ ಮಳೆ ದಾಖಲಾಗಿದ್ದರೆ, ಜಿಲ್ಲೆಯ ಹುಲಿಕೋಟೆ ಕೆವಿಕೆ ಕೇಂದ್ರದಲ್ಲಿ 18.0 ಮಿಮೀ ಮಳೆಯಾಗಿದೆ. ಗುಡುಗು ಮತ್ತು ಮಿಂಚಿನ ಸಹಿತ ಸುರಿದ ಈ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.&lt;/p&gt;&lt;p&gt;ಉತ್ತರ ಒಳನಾಡಿನ ಧಾರವಾಡದಲ್ಲಿ 20.0 ಮಿಮೀ&lt;/p&gt;&lt;p&gt;ಕೊಪ್ಪಳದ ಯಲಬುರ್ಗಾದಲ್ಲಿ 19.0 ಮಿಮೀ ಮಳೆಯಾಗುವ ಮೂಲಕ ವರುಣನ ಅಬ್ಬರ ಕಂಡುಬಂದಿದೆ.&lt;/p&gt;&lt;img&gt;&lt;p&gt;ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳೂರು ವಿಮಾನ ನಿಲ್ದಾಣದ ಬಳಿ 13.8 ಮಿಮೀ ಮಳೆಯಾಗಿದೆ.&amp;nbsp;&lt;/p&gt;&lt;p&gt;ಮಲೆನಾಡು ಭಾಗದ ಶಿವಮೊಗ್ಗದ ನವುಲೆಯಲ್ಲಿ 19.5 ಮಿಮೀ ಹಾಗೂ ಇರುವಾಕಿಯಲ್ಲಿ 19.5 ಮಿಮೀ ಮಳೆಯಾಗಿದೆ.&amp;nbsp;&lt;/p&gt;&lt;p&gt;ಚಿಕ್ಕಮಗಳೂರಿನ ಮುಡಿಗೆರೆಯಲ್ಲಿ 3.0 ಮಿಮೀ ಮತ್ತು ಬಾಳೆಹೊನ್ನೂರಿನಲ್ಲಿ ಸಾಧಾರಣ ಮಳೆಯಾಗಿದೆ.&amp;nbsp;&lt;/p&gt;&lt;p&gt;ಶಿರಸಿಯಲ್ಲಿ 10.5 ಮಿಮೀ ಮಳೆಯಾಗುವ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆರಾಯ ತಂಪೆರೆದಿದ್ದಾನೆ.&lt;/p&gt;&lt;img&gt;&lt;p&gt;ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೇಳಿಕೊಳ್ಳುವಂತಹ ಭಾರಿ ಮಳೆಯಾಗದಿದ್ದರೂ, ಎಚ್&zwnj;ಎಎಲ್ (HAL) ವಿಮಾನ ನಿಲ್ದಾಣದ ಸುತ್ತಮುತ್ತ 1.4 ಮಿಮೀ ಸಾಧಾರಣ ಮಳೆಯಾಗಿದೆ. ನಗರದ ಹಲವೆಡೆ ಕ್ಯುಮುಲೋನಿಂಬಸ್ (CB) ಮೋಡಗಳು ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.&lt;/p&gt;&lt;img&gt;&lt;p&gt;ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ (TSRA) ಸಂಭವಿಸಿದ್ದು, ಹವಾಮಾನ ಕೇಂದ್ರದ ರೇಡಾರ್&zwnj;ಗಳಲ್ಲಿ ಕ್ಯುಮುಲೋನಿಂಬಸ್ ಮೋಡಗಳ ತೀವ್ರತೆ ಕಂಡುಬಂದಿದೆ. ಕಲಬುರಗಿ, ಬೆಳಗಾವಿ, ಚಿತ್ರದುರ್ಗ ಮತ್ತು ವಿದ್ಯಾ ನಗರದ ಭಾಗಗಳಲ್ಲಿ ಮೋಡಗಳು ಕವಿದಿದ್ದು, ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ. ರೈತರಿಗೆ ಈ ಮಳೆ ಮಿಶ್ರಫಲ ನೀಡಿದ್ದು, ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಕೃಷಿಕರಲ್ಲಿ ಹರ್ಷ ಮೂಡಿಸಿದೆ. ಆದರೆ ಅಕಾಲಿಕ ಗುಡುಗು ಮಿಂಚಿನ ಬಗ್ಗೆ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha"/>
        </item>
        <item>
            <title><![CDATA[ಗದಗ: 101 ವರ್ಷ ಹಳೆಯ ಅಪರೂಪದ ಔಷಧಿ ಗುಣದ ಮಡ್ಡಿ ಮರ ಪತ್ತೆ; ಮಧುಮೇಹ ನಿಯಂತ್ರಣಕ್ಕೆ ರಾಮಬಾಣ]]></title>
            <link>https://kannada.asianetnews.com/karnataka-districts/101-year-old-rare-medicinal-maddi-tree-indian-mulberry-discovered-in-naragunda-gadag-helps-controlling-diabetes-mrq/articleshow-y1v4w5t</link>
            <guid isPermaLink="true">https://kannada.asianetnews.com/karnataka-districts/101-year-old-rare-medicinal-maddi-tree-indian-mulberry-discovered-in-naragunda-gadag-helps-controlling-diabetes-mrq/articleshow-y1v4w5t</guid>
            <pubDate>Mon, 01 Jun 2026 06:38:49 +0530</pubDate>
            <description><![CDATA[&lt;p&gt;ರೈತರೊಬ್ಬರ ಜಮೀನಿನಲ್ಲಿ 101 ವರ್ಷ ಹಳೆಯ, ಅಪರೂಪದ ಔಷಧಿ ಗುಣಗಳನ್ನು ಹೊಂದಿರುವ ಮಡ್ಡಿ ಮರ (ಇಂಡಿಯನ್ ಮಲ್ಬೆರಿ) ಪತ್ತೆಯಾಗಿದೆ. ಆಯುರ್ವೇದದಲ್ಲಿ ಮಹತ್ವ ಪಡೆದಿರುವ ಈ ಮರವು ಕೀಲು ನೋವು, ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗಿದ್ದು, ಇದರ ಬೇರಿನಿಂದ ನೈಸರ್ಗಿಕ ಬಣ್ಣವನ್ನೂ ತಯಾರಿಸಲಾಗುತ್ತದೆ. ಈ ಮರವು ಜೀವವೈವಿಧ್ಯ ಸಂರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt0bb7e4z5nfkvv8fg5brmgk,imgname-maddi-mara-1780275846596.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಜಿ. ತೆಗ್ಗಿನಮನಿ&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ನರಗುಂದ ಪಟ್ಟಣದ ಅಜ್ಜಪ್ಪಗೌಡ ಪಾಟೀಲ ಎಂಬವರ ಕುರ್ಲಗೇರಿ ರಸ್ತೆಗೆ ಹೊಂದಿಕೊಂಡಿರುವ ಜಮೀನಿನಲ್ಲಿ ಔಷಧಿ ಗುಣ ಹೊಂದಿರುವ ಅಪರೂಪದ ಮಡ್ಡಿ ಮರ ಪತ್ತೆಯಾಗಿದೆ.&lt;/p&gt;&lt;p&gt;ಇದು ಮೊರಿಂಡಾ ಕೊರಿಯಾ ರುಬಿಯೇಶಿ ಕುಟುಂಬಕ್ಕೆ ಸೇರಿದೆ. ಈ ಮರವು ಸುಮಾರು 101 ವರ್ಷ ಹಳೆಯದಾಗಿದ್ದು, ಇದರ ಕಾಂಡ 6 ಅಡಿ ಅಗಲ ಮತ್ತು ಸುಮಾರು 45 ಅಡಿ ಎತ್ತರವಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಡ್ಡಿ, ಹಳದಿಪಾವಟೆ, ತಗಸಿ ಎಂಬ ಹೆಸರಿಂದ ಕರೆಯಲಾಗುತ್ತದೆ.&lt;/p&gt;&lt;p&gt;ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುವ ಸಣ್ಣ ಅಥವಾ ಮಧ್ಯಮ ಗಾತ್ರದ ಮರವಾಗಿದೆ. ಇದನ್ನು ಇಂಗ್ಲಿಷಿನಲ್ಲಿ ಇಂಡಿಯನ್ ಮಲ್ಬೆರಿ ಅಥವಾ ನೋನಿ ಎಂದು ಕರೆಯುತ್ತಾರೆ. ಇದು ಕರ್ನಾಟಕದ ಒಣ ಮತ್ತು ಅರೆ- ಒಣ ಪ್ರದೇಶಗಳಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ.&lt;/p&gt;&lt;h2&gt;&lt;strong&gt;ಮಡ್ಡಿ ಮರದಲ್ಲಿರುವ ಔಷಧೀಯ ಗುಣಗಳಿಂದ ಏನು ಲಾಭ?&lt;/strong&gt;&lt;/h2&gt;&lt;p&gt;ಆಯುರ್ವೇದ ಮತ್ತು ಸಾಂಪ್ರದಾಯಿಕ ಔಷಧಿ ಪದ್ಧತಿಯಲ್ಲಿ ಈ ಸಸ್ಯದ ಪ್ರತಿಯೊಂದು ಭಾಗವೂ (ಬೇರು, ತೊಗಟೆ, ಎಲೆಗಳು ಮತ್ತು ಹಣ್ಣು) ಅತ್ಯಂತ ಮೌಲ್ಯಯುತವಾಗಿದೆ. ಉರಿಯೂತ ನಿವಾರಕ, ಕೀಲು ನೋವು ಮತ್ತು ಸಂಧಿವಾತದ ಚಿಕಿತ್ಸೆಗೆ ಇದರ ಎಲೆಗಳು ಮತ್ತು ಬೇರುಗಳನ್ನು ಬಳಸಲಾಗುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಗಾಯಗಳು ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.&lt;/p&gt;&lt;p&gt;ರಕ್ತದೊತ್ತಡ, ಮಧುಮೇಹವನ್ನು ನಿಯಂತ್ರಿಸುತ್ತದೆ. ಹಣ್ಣುಗಳಲ್ಲಿ ವಿಟಮಿನ್ ಸಿ ಹೊಂದಿದೆ. ಮರದ ಬೇರುಗಳು ಮೊರಿಂಡೋನ್ ಎಂಬ ನೈಸರ್ಗಿಕ ವರ್ಣದ್ರವ್ಯವನ್ನು ನೀಡುತ್ತವೆ. ಹತ್ತಿ ಮತ್ತು ರೇಷ್ಮೆ ಬಟ್ಟೆಗಳಿಗೆ ಹಳದಿ, ಕೆಂಪು ಮತ್ತು ಕಂದು ಬಣ್ಣಗಳನ್ನು ನೀಡಲು ಇದರ ಬೇರಿನ ತೊಗಟೆಯನ್ನು ಶತಮಾನಗಳಿಂದಲೂ ಬಳಸಲಾಗುತ್ತಿದೆ. ಈಗಲೂ ಖಾದಿ ಬಟ್ಟೆಗಳಿಗೆ ಇದರಿಂದ ತಯಾರಿಸಿದ ಬಣ್ಣವನ್ನು ಬಳಸಲಾಗುತ್ತದೆ.&lt;/p&gt;&lt;h3&gt;&lt;strong&gt;5 ರಿಂದ 35 ಅಡಿ ಎತ್ತರದ ಮರ&lt;/strong&gt;&lt;/h3&gt;&lt;p&gt;ಈ ಮರವು ಸುಮಾರು 5 ರಿಂದ 35 ಅಡಿ ಎತ್ತರಕ್ಕೆ ಬೆಳೆಯುವ ಸದಾ ಹಸಿರಿನ ಸಣ್ಣ ಮರ ಅಥವಾ ಪೊದೆ ಗಿಡವಾಗಿದೆ. ಚಿಕ್ಕದಾದ, ಸುಕ್ಕುಗಟ್ಟಿದ ಮತ್ತು ಒರಟಾದ ಕಾಂಡವನ್ನು ಹೊಂದಿದೆ. ಪತ್ತೆಯಾಗಿರುವ ಈ ಮರದ ಎತ್ತರ 45 ಅಡಿ ಇದೆ. ಎಲೆಗಳು ಗಾಢ ಹಸಿರು ಬಣ್ಣದಲ್ಲಿದ್ದು, ಉದ್ದವಾಗಿವೆ. ಹೂವುಗಳು ಗುಂಡಗಿನ ಆಕಾರದಲ್ಲಿ ಬಿಳಿ ಬಣ್ಣದಲ್ಲಿ ಮತ್ತು ಸುವಾಸನೆಯಿಂದ ಕೂಡಿವೆ.&lt;/p&gt;&lt;p&gt;ಮರದ ಹಣ್ಣುಗಳು ಪೋಷಕಾಂಶದಿಂದ ಕೂಡಿವೆ. ಹಣ್ಣುಗಳು ನೈಸರ್ಗಿಕ ಆಸ್ಕೋರ್ಬಿಕ್ ಆಮ್ಲ (ವಿಟಮಿನ್ ಸಿ) ಮತ್ತು ಇತರ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿವೆ.&lt;/p&gt;&lt;p&gt;ಸ್ಥಳೀಯವಾಗಿ ಈ ಮರಕ್ಕೆ ಬಣ್ಣದ ಮಾರಿ ಮರವೆಂದು ಕರೆಯುತ್ತಾರೆಂದು ರೈತ ರಾಚನಗೌಡ ಪಾಟೀಲ ಮತ್ತು ಪರಿಸರ ಸಂರಕ್ಷರಾದ ದೇವರಾಜ ಮಲ್ಲಸರ್ಜ ದೇಸಾಯಿ ಅವರು ತಿಳಿಸಿದರು.&lt;/p&gt;&lt;p&gt;ಈ ಮರವು ಭಾರತೀಯ ಮೂಲದ ಮರವಾಗಿದ್ದು, ಸಾಂಪ್ರದಾಯಿಕ ವೈದ್ಯಕೀಯದಲ್ಲಿ ಹಾಗೂ ಪ್ರಸ್ತುತ ಕಾಲದಲ್ಲಿಯೂ ಬಳಸಲಾಗುತ್ತಿದೆ. ಇಂತಹ ಅಪರೂಪದ ಸ್ಥಳೀಯ ಜಾತಿಯ ಮರಗಳನ್ನು ಸಂರಕ್ಷಿಸಬೇಕು. ಇದರ ಹೂವು, ಕಾಯಿ ಮತ್ತು ಹಣ್ಣುಗಳು ಹಲವಾರು ಕೀಟ ಹಾಗೂ ಪಕ್ಷಿಗಳಿಗೆ ಆಹಾರ ಮತ್ತು ಸೂರನ್ನು ಒದಗಿಸುತ್ತವೆ ಎಂದು ಪರಿಸರ ಸಂರಕ್ಷಕ ಮಲ್ಲಸರ್ಜ ದೇಸಾಯಿ ಹೇಳಿದರು.&lt;/p&gt;&lt;h3&gt;&lt;strong&gt;ಜೀವವೈವಿಧ್ಯ ಸಮತೋಲನ&lt;/strong&gt;&lt;/h3&gt;&lt;p&gt;ಮರದ ಹೂವುಗಳು, ಕಾಯಿ ಮತ್ತು ಹಣ್ಣುಗಳು ಹಲವಾರು ಕೀಟ ಹಾಗೂ ಪಕ್ಷಿಗಳಿಗೆ ಆಹಾರ ಮತ್ತು ಸೂರನ್ನು ಒದಗಿಸುತ್ತದೆ. ವಯಸ್ಸಾದ ಮರದ ಪೂಟರೆಗಳಲ್ಲಿ ಹಾಲಕ್ಕಿ, ಮರಕುಟುಕ ಮತ್ತು ಮಂಗಟ್ಟೆಯಂತಹ ಪಕ್ಷಿಗಳು ಗೂಡು ಕಟ್ಟುತ್ತವೆ. ಜೀವವೈವಿಧ್ಯ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್. ನಾಯಕ ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/101-year-old-rare-medicinal-maddi-tree-indian-mulberry-discovered-in-naragunda-gadag-helps-controlling-diabetes-mrq/articleshow-y1v4w5t"/>
        </item>
        <item>
            <title><![CDATA[ಗದಗನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ  ಸಮಾನ ಮನಸ್ಕರು, ಬಸವಾದಿ ಶರಣರಿಂದ ತೀವ್ರ ವಿರೋಧ]]></title>
            <link>https://kannada.asianetnews.com/karnataka-districts/strong-opposition-from-like-minded-people-and-basavadi-devotees-to-hindu-convention-in-gadag-mrq/articleshow-yink3wi</link>
            <guid isPermaLink="true">https://kannada.asianetnews.com/karnataka-districts/strong-opposition-from-like-minded-people-and-basavadi-devotees-to-hindu-convention-in-gadag-mrq/articleshow-yink3wi</guid>
            <pubDate>Thu, 21 May 2026 07:57:33 +0530</pubDate>
            <description><![CDATA[&lt;p&gt;ಗದಗಿನಲ್ಲಿ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಹಿಂದೂ ಸಮಾವೇಶಕ್ಕೆ ಸಮಾನ ಮನಸ್ಕರು ಮತ್ತು ಬಸವಾದಿ ಶರಣರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಶರಣ ಪರಂಪರೆಯನ್ನು ನಾಶಮಾಡುವ ಮತ್ತು ಕೋಮುದ್ವೇಷ ಬಿತ್ತುವ RSS ಪ್ರೇರಿತ ಹುನ್ನಾರ ಎಂದು ಅವರು ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks45j9mwcx3y6j41webd7kb0,imgname-saffron-flag-1779330262684.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &amp;nbsp;&lt;/strong&gt;ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವಶರಣರ ಹಿಂದೂ ಸಮಾವೇಶವನ್ನು ಮೇ 31ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಶರಣ ಪರಂಪರೆ ನಾಶಗೊಳಿಸುವ ಪ್ರಯತ್ನ ಇದಾಗಿದೆ ಎಂದು ಸಮಾನ ಮನಸ್ಕರು, ಬಸವಾದಿ ಶರಣರು ಮತ್ತು ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು.&lt;/p&gt;&lt;h2&gt;&lt;strong&gt;ಯಾಕೆ ವಿರೋಧ?&lt;/strong&gt;&lt;/h2&gt;&lt;p&gt;ನಗರದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಸಮಾನ ಮನಸ್ಕರು, ಬಸವಾದಿ ಶರಣರು ಮತ್ತು ಸಮಾಜದ ಮುಖಂಡರು ನಗರದಲ್ಲಿ ಹಿಂದೂ ಸಮಾವೇಶ ಮಾಡುತ್ತಿರುವುದನ್ನು ಖಂಡಿಸಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಮುಖಂಡ ಅಶೋಕ ಬರಗುಂಡಿ ಮಾತನಾಡಿ, ಸಮಾನತೆಯ ಬಾಳನ್ನು ಬದುಕಲು ಶರಣರು ಇಷ್ಟಲಿಂಗದಲ್ಲಿ ಬೆರೆತು, ಎಲ್ಲರೂ ಒಂದೇ ಎನ್ನುವ ಭಾವದಲ್ಲಿ ಬದುಕುತ್ತಾರೆ. ಇದನ್ನು ಸಹಿಸದ ಮನುವಾದಿಗಳು, ವೈದಿಕ ಮನಸ್ಥಿತಿಯವರು ಇದನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.&lt;/p&gt;&lt;p&gt;ಗದಗಿನಲ್ಲಿ ಪ್ರತಿರೋಧ ಒಡ್ಡುವುದಿಲ್ಲವೆಂದು ತಿಳಿದು ಆರ್&zwnj;ಎಸ್ಎಸ್, ಮುನುವಾದಿಗಳು ಹಿಂದು ಸಮಾವೇಶ ಮಾಡುತ್ತಿದ್ದು, ಈ ಮೂಲಕ ಬಸವಣ್ಣನವರ ವಿಚಾರಗಳಲ್ಲಿ ಮನುವಾದಿಗಳು ನುಗ್ಗುತ್ತಿದ್ದಾರೆ. ಗದುಗಿನಲ್ಲಿ ಇದರ ವಿರುದ್ಧ ದೊಡ್ಡಮಟ್ಟದಲ್ಲಿ ಪ್ರತಿರೋಧ ವ್ಯಕ್ತಪಡಿಸಬೇಕು ಎಂದರು.&lt;/p&gt;&lt;p&gt;ಹೋರಾಟಗಾರ ಶರೀಫ್ ಬಿಳೆಯಲಿ ಮಾತನಾಡಿ, ಒಂದು ವರ್ಷದ ಹಿಂದೆ ಆರ್&zwnj;ಎಸ್ಎಸ್ ಹಾಗೂ ಹಿಂದೂ ಸಂಘಟನೆಗಳು ಮಹಾಯಜ್ಞ ಕುಂಭಮೇಳ ಮಾಡಿದರು. ಈಗ ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ಮಾಡಲು ಹೊರಟಿದ್ದಾರೆ. ನಾಡಿನೊಳಗೆ ಕೇವಲ ಬಸವಣ್ಣನವರ ವಚನಗಳನ್ನು ನಾಶಗೊಳಿಸುವುದು ಅಷ್ಟೆ ಅಲ್ಲ, ಈಡೀ ಶೋಷಿತ ವರ್ಗದವರನ್ನು ನಾಶಗೊಳಿಸಲು ಹೊರಟಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಬೇಕು ಎಂದರು.&lt;/p&gt;&lt;h3&gt;&lt;strong&gt;ಸೌಹಾರ್ದತೆ ಹಾಳು ಮಾಡುವ &amp;nbsp;ಪ್ರಯತ್ನ&lt;/strong&gt;&lt;/h3&gt;&lt;p&gt;ಮುಖಂಡ ಮುತ್ತು ಬಿಳೆಯಲಿ ಮಾತನಾಡಿ, ಆರ್&zwnj;ಎಸ್ಎಸ್ ಪ್ರಚಾರಕರಾದ ಕನ್ಹೇರಿ ಸ್ವಾಮಿ ಹೊದಲ್ಲೆಲ್ಲ ಅಶ್ಲೀಲ ಭಾಷೆಯ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ. ಈಗ ಗದುಗಿನಲ್ಲಿ ಹಿಂದೂ ಸಮಾವೇಶದ ಹೆಸರಿನಲ್ಲಿ ಇಲ್ಲಿನ ಸೌಹಾರ್ದತೆಯನ್ನು ಹಾಳು ಮಾಡುತ್ತಿದ್ದಾರೆ ಎಂದರು.&lt;/p&gt;&lt;p&gt;ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಮುಂತಾದವರು ಮಾತನಾಡಿದರು. ಸಭೆಯಲ್ಲಿ ಬಸವರಾಜ ಎಂ. ಕಡೇಮನಿ, ಎಚ್.ಎಸ್. ಸೊಂಪೂರ, ಕೊಟ್ರಬಸಪ್ಪ ಚಟ್ಟಿ, ವಿ&zwnj;.ಕೆ. ಕರೇಗೌಡ್ರ, ದಿಲೀಪಕುಮಾರ ಹಲವಾಗಲಿ, ಪ್ರಕಾಶ ಅಸುಂಡಿ, ಮಂಜುನಾಥ ಹಗೇದಾಳ, ಎಸ್.ಐ. ಪವಾಡಗೌಡ್ರ, ಆನಂದ ಶಿಂಗಾಡಿ, ನಾಗಭೂಷಣ ಬಡಗನ್ನವರ, ಸುವರ್ಣ ಗಾಳಪ್ಪನವರ, ಸುಜಾತಾ ವಾರದ, ಮಂಗಳಾ ನಾಲವಾಡ, ಬಾಲರಾಜ ಅರಬರ, ಶಿವಾನಂದ ತಮ್ಮಣ್ಣವರ, ಪರಶು ಕಾಳೆ, ಅನಿಲ್ ಕಾಳೆ, ಬಸು ಬಿಳೆಯಲಿ, ಮಂಜುನಾಥ ಹಗೆದಾಳ ಸೇರಿದಂತೆ ಜಿಲ್ಲೆಯ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ, ಬಸವದಳ, ಸಾಹಿತ್ಯ ಮೇಳ, ದಲಿತ ಕಲಾ ಮಂಡಳಿ, ದಲಿತ ಸಂಘಟನೆಗಳ ಒಕ್ಕೂಟ, ನಗರದ ಎಲ್ಲ ಪ್ರಗತಿಪರ ಮತ್ತು ಬಸವಾದಿ ಶರಣರ ಸಂಘಟನೆಗಳ ಮುಖಂಡರು ಇದ್ದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/strong-opposition-from-like-minded-people-and-basavadi-devotees-to-hindu-convention-in-gadag-mrq/articleshow-yink3wi"/>
        </item>
        <item>
            <title><![CDATA[ಬೆಂಗಳೂರು-ವಿಜಯಪುರ ನಡುವೆ ಬೈಪಾಸ್ ರೈಲು ಸಂಚಾರ ಆರಂಭ: 5 ಗಂಟೆ ಸಮಯ ಉಳಿತಾಯಕ್ಕೆ ಸಚಿವ ಎಂ.ಬಿ. ಪಾಟೀಲ ಸಂತಸ!]]></title>
            <link>https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</link>
            <guid isPermaLink="true">https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</guid>
            <pubDate>Fri, 15 May 2026 19:41:15 +0530</pubDate>
            <description><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7vqdjdvnc1cy078ydnn1kj,imgname-idnian-railways--3--1778380420685.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.&lt;img&gt;&lt;p&gt;ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು-ವಿಜಯಪುರ ನಡುವಿನ ತ್ವರಿತ ರೈಲು ಸೇವೆಗೆ ಈಗ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ವಿಶೇಷ ರೈಲು ಓಡಿಸುವ ಸಚಿವ ಎಂ.ಬಿ. ಪಾಟೀಲರ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬೆಳವಣಿಗೆಯ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ತಮ್ಮ ಮನವಿಗೆ ಸ್ಪಂದಿಸಿ ವಿಶೇಷ ರೈಲು ಆರಂಭಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಎಂ.ಬಿ. ಪಾಟೀಲರು ವಿಜಯಪುರ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಅವರು ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆದು, ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸುವುದರಿಂದ ಸಮಯ ಉಳಿತಾಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದರು.&lt;/p&gt;&lt;img&gt;&lt;p&gt;ಸದ್ಯ ವಿಜಯಪುರ ಮತ್ತು ಬೆಂಗಳೂರು ನಡುವೆ ರೈಲು ಪ್ರಯಾಣಕ್ಕೆ ಸುಮಾರು 15 ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ. ಆದರೆ, ರೈಲುಗಳು ಹುಬ್ಬಳ್ಳಿ ನಗರದೊಳಗೆ ಹೋಗುವ ಬದಲು ಹುಬ್ಬಳ್ಳಿ ಬೈಪಾಸ್ ಮೂಲಕ ಸಂಚರಿಸಿದರೆ ಈ ಸಮಯವನ್ನು ಕೇವಲ 10 ಗಂಟೆಗಳಿಗೆ ಇಳಿಸಬಹುದು.&amp;nbsp;&lt;/p&gt;&lt;p&gt;ಇದರಿಂದ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ರಾಜಧಾನಿಗೆ ಬರಲು ಮತ್ತು ಹೋಗಲು ಲಭ್ಯವಿರುವ ಅತ್ಯಂತ ವೇಗದ ಸಾರಿಗೆ ಇದಾಗಲಿದೆ ಎಂದು ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ನೈರುತ್ಯ ರೈಲ್ವೆಯು ಈ ವಿಶೇಷ ರೈಲನ್ನು ಜೂನ್ 28ರವರೆಗೆ ಓಡಿಸಲು ನಿರ್ಧರಿಸಿದೆ.&lt;/p&gt;&lt;p&gt;&lt;strong&gt;ಯಶವಂತಪುರದಿಂದ: &lt;/strong&gt;ಪ್ರತೀ ಶನಿವಾರ ಬೆಂಗಳೂರಿನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ವಿಜಯಪುರದಿಂದ:&lt;/strong&gt; ಪ್ರತೀ ಭಾನುವಾರ ಹಿಂತಿರುಗಲಿದೆ.&lt;/p&gt;&lt;p&gt;&lt;strong&gt;ಬೋಗಿಗಳು:&lt;/strong&gt; ಒಟ್ಟು 19 ಬೋಗಿಗಳನ್ನು ಈ ರೈಲು ಹೊಂದಿರಲಿದೆ.&lt;/p&gt;&lt;p&gt;&lt;strong&gt;ನಿಲುಗಡೆಗಳು:&lt;/strong&gt; ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ, ಗದಗ ಬೈಪಾಸ್, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಮತ್ತು ಬಸವನ ಬಾಗೇವಾಡಿ ನಿಲ್ದಾಣಗಳಲ್ಲಿ ಈ ರೈಲು ನಿಲ್ಲಲಿದೆ.&lt;/p&gt;&lt;img&gt;&lt;p&gt;ಈ ವಿಶೇಷ ರೈಲನ್ನು ಕೇವಲ ಒಂದು ತಿಂಗಳಿಗೆ ಸೀಮಿತಗೊಳಿಸದೆ, ತ್ವರಿತವಾಗಿ ಕಾಯಂ ರೈಲನ್ನಾಗಿ ಪರಿವರ್ತಿಸಬೇಕು ಎಂದು ಸಚಿವರು ಮತ್ತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.&amp;nbsp;&lt;/p&gt;&lt;img&gt;&lt;p&gt;&lt;strong&gt;ಸೂಕ್ತ ಸಮಯ: &lt;/strong&gt;ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಬೆಳಿಗ್ಗೆ 6ಕ್ಕೆ ವಿಜಯಪುರ ತಲುಪುವಂತಿರಬೇಕು. ಅದೇ ರೀತಿ ವಿಜಯಪುರದಿಂದ ರಾತ್ರಿ 8ಕ್ಕೆ ಹೊರಟು ಬೆಳಿಗ್ಗೆ 6ಕ್ಕೆ ಬೆಂಗಳೂರಿಗೆ ತಲುಪುವಂತಿರಬೇಕು.&lt;/p&gt;&lt;p&gt;&lt;strong&gt;ಯಶವಂತಪುರ ತಲುಪುವ ಸಮಯ: &lt;/strong&gt;ಈಗಿನ ವಿಶೇಷ ರೈಲು ಮುಂಜಾನೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಇದು ಪ್ರಯಾಣಿಕರಿಗೆ ಮನೆಗಳಿಗೆ ಹೋಗಲು ಕಷ್ಟಕರವಾಗುವುದರಿಂದ, ಮುಂಜಾನೆ 5:30 ರಿಂದ 6 ಗಂಟೆಯ ಸುಮಾರಿಗೆ ತಲುಪುವಂತೆ ಮಾಡಬೇಕು ಎಂದು ಅವರು ಕೋರಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q"/>
        </item>
    </channel>
</rss>
