<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 18 May 2026 13:25:44 +0530</lastBuildDate>
        <atom:link href="https://kannada.asianetnews.com/rss/gadag" rel="self" type="application/rss+xml"/>
        <item>
            <title><![CDATA[ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ]]></title>
            <link>https://kannada.asianetnews.com/gallery/karnataka-districts/over-3000-ancient-relics-discovered-in-historic-lakkundi-village-overtook-warangal-as-the-most-famous-open-museum-mrq-1aq2ozm</link>
            <guid isPermaLink="true">https://kannada.asianetnews.com/gallery/karnataka-districts/over-3000-ancient-relics-discovered-in-historic-lakkundi-village-overtook-warangal-as-the-most-famous-open-museum-mrq-1aq2ozm</guid>
            <pubDate>Mon, 11 May 2026 06:35:38 +0530</pubDate>
            <description><![CDATA[&lt;p&gt;ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kra8nj8dqh72cgqsvbsw1cpm,imgname-lakkundi-1778461100301.jpg" type="image/jpeg" height="390" width="690"/>
            <content:encoded><![CDATA[&lt;p&gt;ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ&lt;/p&gt;&lt;img&gt;&lt;p&gt;ಕಲೆ ಮತ್ತು ವಾಸ್ತುಶಿಲ್ಪದ ತವರೂರು, ಐತಿಹಾಸಿಕ ಲಕ್ಕುಂಡಿ ಗ್ರಾಮವು ಇದೀಗ ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಮೊದಲ ಗ್ರಾಮ ಎಂಬ ಐತಿಹಾಸಿಕ ದಾಖಲೆ ನಿರ್ಮಿಸುವ ಕಾಲ ಸನ್ನಿಹಿತವಾಗಿದೆ. ಈವರೆಗಿನ ಅನ್ವೇಷಣೆ ಹಾಗೂ ಇತ್ತೀಚಿನ ಪ್ರಾಚ್ಯಾವಶೇಷ ಅನ್ವೇಷಣೆ ಮಾಸಾಚರಣೆಯ ಫಲವಾಗಿ ಲಕ್ಕುಂಡಿಯಲ್ಲಿ ಈಗ ಒಟ್ಟು 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇಡೀ ದೇಶದ ಗಮನ ಸೆಳೆಯುತ್ತಿದೆ.&lt;/p&gt;&lt;img&gt;&lt;p&gt;​ಇದುವರೆಗೆ ತೆಲಂಗಾಣದ ವಾರಂಗಲ್ ದೇಶದ ಮೊದಲ ಒಪನ್ ಮ್ಯೂಸಿಯಂ ಎಂಬ ಹೆಗ್ಗಳಿಕೆ ಹೊಂದಿತ್ತು. ಅಲ್ಲಿ ಸುಮಾರು 2 ಸಾವಿರ ಪ್ರಾಚ್ಯಾವಶೇಷಗಳಿದ್ದವು. ಲಕ್ಕುಂಡಿಯಲ್ಲಿಗ ಈ ಸಂಖ್ಯೆ 3 ಸಾವಿರ ದಾಟುವ ಹಂತದಲ್ಲಿದೆ. ಮೊದಲ ಹಂತದಲ್ಲಿ 1500 ಅವಶೇಷಗಳನ್ನು ಗುರುತಿಸಲಾಗಿತ್ತು. ಇತ್ತೀಚಿನ ವಿಶೇಷ ಅನ್ವೇಷಣಾ ಕಾರ್ಯದಲ್ಲಿ ಮತ್ತೆ 1500 ವಸ್ತುಗಳು ಪತ್ತೆಯಾಗಿವೆ. ಈ ಮೂಲಕ ಲಕ್ಕುಂಡಿ ಅಧಿಕೃತವಾಗಿ ದೇಶದ ಪ್ರಾಚ್ಯಾವಶೇಷಗಳ ರಾಜಧಾನಿ ಎಂಬ ಪಟ್ಟಕ್ಕೇರುವ ಸಾಧ್ಯತೆ ನಿಚ್ಚಳವಾಗಿದೆ.&lt;/p&gt;&lt;img&gt;&lt;p&gt;ಇತ್ತೀಚಿನ ಉತ್ಖನನದ ವೇಳೆ ಲಕ್ಕುಂಡಿಯ ಕುಂಬಾರ ಬಾವಿಯ ಬಳಿ 9- 10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅತ್ಯಂತ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಇದು ಕೇವಲ ಕಲ್ಲಲ್ಲ, ಅಂದಿನ ಶೌರ್ಯ ಮತ್ತು ಸಂಸ್ಕೃತಿಯ ಜೀವಂತ ಸಾಕ್ಷಿಯಾಗಿವೆ. ಈ ವೀರಗಲ್ಲು ನಾಲ್ಕು ಹಂತದ ಕೆತ್ತನೆಗಳನ್ನು ಹೊಂದಿದೆ. ಕೆಳಗಿನ ಪಟ್ಟಿಕೆಯಲ್ಲಿ ಯುದ್ಧದ ದೃಶ್ಯವಿದ್ದು (ಮಣ್ಣಿನಲ್ಲಿ ಹೂತಿದೆ), ಎರಡನೇ ಪಟ್ಟಿಕೆಯಲ್ಲಿ ಅಪ್ಸರೆಯರು ವೀರನನ್ನು ಸ್ವರ್ಗಕ್ಕೆ ಕರೆದೊಯ್ಯುತ್ತಿರುವ ಮನಮೋಹಕ ದೃಶ್ಯವಿದೆ.&lt;/p&gt;&lt;img&gt;&lt;p&gt;ಸಂಗೀತ ವಾದ್ಯಗಳ ಕೆತ್ತನೆ ಅಂದಿನ ವೈಭವವನ್ನು ಸಾರುತ್ತಿದೆ. ಮೂರನೇ ಪಟ್ಟಿಕೆಯಲ್ಲಿ ವೀರನು ಸ್ವರ್ಗದಲ್ಲಿ ಆಸೀನನಾಗಿದ್ದು, ಚಾಮರಧಾರಿಗಳು ಸೇವೆಯಲ್ಲಿ ನಿಂತಿರುವುದು ಕಂಡುಬರುತ್ತದೆ. ಮೇಲ್ಭಾಗದ ಪಟ್ಟಿಕೆಯಲ್ಲಿ ಸೂರ್ಯ- ಚಂದ್ರ ಹಾಗೂ ಶಿವಲಿಂಗಕ್ಕೆ ಯತಿಯೊಬ್ಬರು ಪೂಜೆ ಸಲ್ಲಿಸುತ್ತಿರುವ ಚಿತ್ರಣವಿದ್ದು, ಇದು ಶಾಸನೋಕ್ತವಾದ ವಿಶೇಷ ವೀರಗಲ್ಲಾಗಿದೆ.&lt;/p&gt;&lt;img&gt;&lt;p&gt;ಲಕ್ಕುಂಡಿಯ ಈ ಜಾಗತಿಕ ಮಟ್ಟದ ಸಾಧನೆಯ ಹಿಂದೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಅವಿರತ ಶ್ರಮವಿದೆ. ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವನ್ನಾಗಿ ರೂಪಿಸುವ ಅವರ ಕನಸು ಈಗ ನನಸಾಗುತ್ತಿದೆ. ಅವರ ವಿಶೇಷ ಆಸಕ್ತಿಯಿಂದಾಗಿ ಇಲ್ಲಿ ನಿರಂತರ ಅನ್ವೇಷಣೆ, ಮಾರ್ಕಿಂಗ್ ಹಾಗೂ ಸಂರಕ್ಷಣಾ ಕಾರ್ಯಗಳು ಯುದ್ಧೋಪಾದಿಯಲ್ಲಿ ನಡೆಯುತ್ತಿವೆ ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಿದ್ದಲಿಂಗೇಶ್ವರ ಪಾಟೀಲ ತಿಳಿಸಿದರು.&lt;/p&gt;&lt;img&gt;&lt;p&gt;​ಒಟ್ಟಾರೆಯಾಗಿ ಲಕ್ಕುಂಡಿಯು ಕೇವಲ ಗದಗ ಜಿಲ್ಲೆಯ ಹೆಮ್ಮೆಯಷ್ಟೇ ಅಲ್ಲದೆ, ಭಾರತದ ಸಾಂಸ್ಕೃತಿಕ ಭೂಪಟದಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಈಗ ಇತಿಹಾಸದ ಕಥೆ ಹೇಳುತ್ತಿದ್ದು, ಪ್ರವಾಸಿಗರನ್ನು ಹಾಗೂ ಸಂಶೋಧಕರನ್ನು ಕೈಬೀಸಿ ಕರೆಯುತ್ತಿದೆ. ಇಲ್ಲಿನ ಮಣ್ಣಿನ ಹುದುಗಿ ಹೋಗಿರುವ ಇತಿಹಾಸ ಅಗೆದಷ್ಟು ಆಳಕ್ಕಿಳಿಯುತ್ತಿದೆ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.&lt;/p&gt;&lt;img&gt;&lt;p&gt;ಲಕ್ಕುಂಡಿಯನ್ನು ನಾವೆಲ್ಲರೂ ಇಲ್ಲಿಯವರೆಗೂ ನೋಡುತ್ತಿದ್ದ ದೃಷ್ಟಿಕೋನವೇ ಬೇರೆ ಇತ್ತು. ಪ್ರಾಚ್ಯಾವಶೇಷಗಳ ಅನ್ವೇಷಣೆಯ ನಂತರ ಜಗತ್ತೇ ಕಣ್ಣರಳಿಸಿ ನೋಡುವಂತಾಗಿದೆ. ದೇಶ ವಿದೇಶದ ಇತಿಹಾಸ ತಜ್ಞರು ಸಂಶೋಧನಾ ದೃಷ್ಟಿಯಿಂದ ಲಕ್ಕುಂಡಿ ಬರುವಂತಾಗಿದೆ. ಲಕ್ಕುಂಡಿ ಯುನೆಸ್ಕೋ ಪಟ್ಟಿಗೆ ಸೇರುವ ಎಲ್ಲ ಅರ್ಹತೆ ಹೊಂದಿದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.&lt;/p&gt;&lt;img&gt;&lt;p&gt;ದೇಶದಲ್ಲಿಯೇ ಅತ್ಯುತ್ಕೃಷ್ಟ, ಪ್ರಾಚ್ಯಾವಶೇಷಗಳು ಲಕ್ಕುಂಡಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಜೋಡಿಸುವ ಕಾರ್ಯವೂ ನಡೆದಿದೆ. ಆದರೆ ಪ್ರಸ್ತುತ ದೇಶದಲ್ಲಿಯೇ ಅತಿ ದೊಡ್ಡದು ಎನ್ನಲಾದ ವಾರಂಗಲ್ಲನಲ್ಲಿರುವ ತೆರೆದ ಮ್ಯೂಜಿಯಂಗಿಂತಲೂ ಉತ್ತಮವಾದ ಸೌಲಭ್ಯ ಹೊಂದಿರುವ ಒಪನ್ ಮ್ಯೂಜಿಯಂ ಲಕ್ಕುಂಡಿಯಲ್ಲಿ ನಿರ್ಮಾಣವಾಗಬೇಕಿದೆ. ಅಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಒಂದು ವಿಶೇಷ ಅನುಭವ ಮತ್ತು ಇತಿಹಾಸ ಕಲ್ಪನೆ ದೊರೆಯುವಂತಹ ಮ್ಯೂಜಿಯಂ ನಿರ್ಮಾಣವಾಗಲಿ ಎನ್ನುವುದು ಬಹುತೇಕರ ಆಸೆಯಾಗಿದೆ.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/over-3000-ancient-relics-discovered-in-historic-lakkundi-village-overtook-warangal-as-the-most-famous-open-museum-mrq-1aq2ozm"/>
        </item>
        <item>
            <title><![CDATA[ರಾಜ್ಯದಲ್ಲಿ ಮಳೆ ಆರ್ಭಟ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮುಂಡರಗಿ ಟವರ್ ಢಮಾರ್, ಯಾದಗಿರಿ ಸಿಡಿಲಿಗೆ 50 ಕುರಿ ಬಲಿ!]]></title>
            <link>https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</link>
            <guid isPermaLink="true">https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah</guid>
            <pubDate>Mon, 27 Apr 2026 20:15:43 +0530</pubDate>
            <description><![CDATA[&lt;p&gt;ಹವಾಮಾನ ಇಲಾಖೆಯು ಕರ್ನಾಟಕದ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗದಲ್ಲಿ ಬಿರುಗಾಳಿಗೆ ಮೊಬೈಲ್ ಟವರ್ ಕುಸಿದುಬಿದ್ದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq7pcmhj9phzabq7y5zf6te3,imgname-karnataka-rain-orange-alert-1777301082673.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು/ಗದಗ/ಯಾದಗಿರಿ (ಏ.27): ರಾ&lt;/strong&gt;ಜ್ಯದಲ್ಲಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಒಟ್ಟು ಎಂಟು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.&lt;/p&gt;&lt;h2&gt;&lt;strong&gt;ಯಾವ ಯಾವ ಜಿಲ್ಲೆಗಳಲ್ಲಿ ಮಳೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಎರಡು ಪ್ರತ್ಯೇಕ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ:&lt;/p&gt;&lt;p&gt;&lt;strong&gt;ಹೆಚ್ಚಿನ ತೀವ್ರತೆಯ ಮಳೆ (ಗಂಟೆಗೆ 40-50 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಿಕ್ಕಮಗಳೂರು, ಹಾಸನ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋಮೀಟರ್ ಇರಲಿದ್ದು, ಗುಡುಗು ಸಹಿತ ಮಿಂಚಿನ ಅಬ್ಬರ ಜೋರಾಗಿರಲಿದೆ.&lt;/p&gt;&lt;p&gt;&lt;strong&gt;ಸಾಧಾರಣ ಮಳೆ (ಗಂಟೆಗೆ 30-40 ಕಿ.ಮೀ ವೇಗದ ಗಾಳಿ):&lt;/strong&gt;&lt;/p&gt;&lt;p&gt;ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಲ್ಲಿ ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.&lt;/p&gt;&lt;p&gt;ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಧಾರಾಕಾರ ಮಳೆ ಮತ್ತು ಬಿರುಗಾಳಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದರೆ, ಗದಗ ಜಿಲ್ಲೆಯಲ್ಲಿ ಬೃಹತ್ ಮೊಬೈಲ್ ಟವರ್ ನೆಲಕ್ಕಪ್ಪಳಿಸಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.&lt;/p&gt;&lt;h2&gt;&lt;strong&gt;ಯಾದಗಿರಿ: ಕುರಿಗಾಹಿಗಳ ಬದುಕು ಬೀದಿಗೆ&lt;/strong&gt;&lt;/h2&gt;&lt;p&gt;ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ರೈತರು ತತ್ತರಿಸಿದ್ದಾರೆ. ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು ಮಲ್ಲಪ್ಪ, ಆಶಪ್ಪ, ಜಾಲ್ಲಪ್ಪ, ಲಕ್ಸಮಪ್ಪ ಮತ್ತು ಹನುಮಂತ ಎಂಬ ರೈತರಿಗೆ ಸೇರಿದ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ತಮ್ಮ ಜೀವನಾಧಾರವಾಗಿದ್ದ ಕುರಿಗಳ ಮಾರಣಹೋಮ ಕಂಡು ಕುರಿಗಾಹಿಗಳು ಕಣ್ಣೀರು ಹಾಕುತ್ತಿದ್ದಾರೆ. ನೊಂದ ರೈತರಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸ್ಥಳೀಯ ಹೋರಾಟಗಾರರು ಆಗ್ರಹಿಸಿದ್ದಾರೆ.&lt;/p&gt;&lt;h2&gt;&lt;strong&gt;ಗದಗ: ಗಾಳಿ ಮಳೆಗೆ ಉರುಳಿದ ಮೊಬೈಲ್ ಟವರ್&lt;/strong&gt;&lt;/h2&gt;&lt;p&gt;ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಜಾಗೃತಿ ಸರ್ಕಲ್ ಬಳಿ ಬಿರುಗಾಳಿ ಮಳೆಯ ರಭಸಕ್ಕೆ ಏರ್&zwnj;ಟೆಲ್ ಮೊಬೈಲ್ ಟವರ್&zwnj;ವೊಂದು ಬಿಲ್ಡಿಂಗ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಸವಣೂರು ಎಂಬುವವರಿಗೆ ಸೇರಿದ ಕಟ್ಟಡದ ಮೇಲೆ ಈ ಟವರ್ ಅಳವಡಿಸಲಾಗಿತ್ತು. ಅದೃಷ್ಟವಶಾತ್ ಟವರ್ ಬೀಳುವ ಸಮಯದಲ್ಲಿ ಜನಸಂಚಾರ ವಿರಳವಾಗಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;h2&gt;&lt;strong&gt;ಸಂಭವನೀಯ ಹಾನಿಗಳು:&lt;/strong&gt;&lt;/h2&gt;&lt;ul&gt; &lt;li&gt;ಈ ಹಠಾತ್ ಹವಾಮಾನ ಬದಲಾವಣೆಯಿಂದ ಕೆಲವು ಸಮಸ್ಯೆಗಳು ಎದುರಾಗಬಹುದು ಎಂದು ಇಲಾಖೆ ಎಚ್ಚರಿಸಿದೆ:&lt;/li&gt; &lt;li&gt;ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು.&lt;/li&gt; &lt;li&gt;ರಸ್ತೆಗಳಲ್ಲಿ ಸಣ್ಣಪುಟ್ಟ ಸಂಚಾರ ದಟ್ಟಣೆ ಹಾಗೂ ಮರಗಳ ಕೊಂಬೆಗಳು ಮುರಿದು ಬೀಳುವ ಸಾಧ್ಯತೆಯಿದೆ.&lt;/li&gt; &lt;li&gt;ದುರ್ಬಲವಾದ ಕಟ್ಟಡಗಳು ಅಥವಾ ಕಚ್ಚಾ ಮನೆಗಳಿಗೆ ಹಾನಿಯಾಗಬಹುದು.&lt;/li&gt; &lt;li&gt;ವಿಶೇಷವಾಗಿ ರೈತರು ಕೊಯ್ಲು ಮಾಡಿ ತೆರೆದ ಜಾಗದಲ್ಲಿಟ್ಟಿರುವ ಬೆಳೆಗಳಿಗೆ ಹಾನಿಯಾಗುವ ಸಂಭವವಿದೆ.&lt;/li&gt; &lt;li&gt;ಸಾರ್ವಜನಿಕರಿಗೆ ಸೂಚನೆಗಳು:&lt;/li&gt; &lt;li&gt;ಮಳೆಯ ಸಮಯದಲ್ಲಿ ಸುರಕ್ಷಿತವಾಗಿರಲು ಹವಾಮಾನ ಇಲಾಖೆಯು ಕೆಲವು ಕ್ರಮಗಳನ್ನು ಸೂಚಿಸಿದೆ:&lt;/li&gt; &lt;li&gt;ಮಳೆಯ ಸಂದರ್ಭದಲ್ಲಿ ಮನೆಯೊಳಗೆ ಇರಿ, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ.&lt;/li&gt; &lt;li&gt;ಸಾಧ್ಯವಾದರೆ ಪ್ರಯಾಣವನ್ನು ಮುಂದೂಡಿ. ಒಂದು ವೇಳೆ ಪ್ರಯಾಣಿಸುವುದು ಅನಿವಾರ್ಯವಾದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ.&lt;/li&gt; &lt;li&gt;ಗುಡುಗು ಸಿಡಿಲು ಇರುವಾಗ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.&lt;/li&gt; &lt;li&gt;ಮನೆಯಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್&zwnj;ಪ್ಲಗ್ (Unplug) ಮಾಡಿ.&lt;/li&gt; &lt;li&gt;ಜಲಮೂಲಗಳಿಂದ (ಕೆರೆ, ನದಿ) ತಕ್ಷಣ ಹೊರಬನ್ನಿ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಿ.&lt;/li&gt; &lt;li&gt;ರೈತರು ತಮ್ಮ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡಿ.&lt;/li&gt; &lt;li&gt;ಮುಂದಿನ ಮೂರು ಗಂಟೆಗಳ ಕಾಲ ಈ ಜಿಲ್ಲೆಗಳ ಜನರು ಜಾಗರೂಕರಾಗಿರಬೇಕು ಎಂದು ಹವಾಮಾನ ಇಲಾಖೆಯ ಕರ್ತವ್ಯನಿರತ ಅಧಿಕಾರಿಗಳು ತಿಳಿಸಿದ್ದಾರೆ.&lt;/li&gt;&lt;/ul&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/karnataka-rain-update-yadagir-lightning-50-sheeps-death-gadag-airtel-tower-collapse-sat/articleshow-3s61bah"/>
        </item>
        <item>
            <title><![CDATA[ಆಟಿಕೆ ಯಂತ್ರ ಮುರಿದು ಬಿದ್ದು 22 ಜನರಿಗೆ ಗಾಯ; ತೋಂಟದಾರ್ಯ ಜಾತ್ರಾ ಕಮಿಟಿ ಮೇಲೆ ಕ್ರಿಮಿನಲ್ ಕೇಸ್‌]]></title>
            <link>https://kannada.asianetnews.com/karnataka-districts/huge-toy-machine-collapses-injuring-22-people-criminal-case-against-gadag-tontadarya-jatra-committee-mrq/articleshow-6mdfo47</link>
            <guid isPermaLink="true">https://kannada.asianetnews.com/karnataka-districts/huge-toy-machine-collapses-injuring-22-people-criminal-case-against-gadag-tontadarya-jatra-committee-mrq/articleshow-6mdfo47</guid>
            <pubDate>Tue, 05 May 2026 06:52:44 +0530</pubDate>
            <description><![CDATA[ಗದಗದ ತೋಂಟದಾರ್ಯ ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೋ&zwnj;ರ್ ಯಂತ್ರವು ತಾಂತ್ರಿಕ ದೋಷದಿಂದ ಮುರಿದುಬಿದ್ದು 21 ಜನರು ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ, ಜಾತ್ರಾ ಕಮಿಟಿ ಅಧ್ಯಕ್ಷರು ಮತ್ತು ಮ್ಯಾನೇಜರ್ ಸೇರಿದಂತೆ ಏಳು ಜನರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqtvm25bgan8a4ve70xmsc35,imgname-gadag-1777944103083.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ:&amp;nbsp;&lt;/strong&gt; ಜಿಲ್ಲೆಯ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆ ಹೊಂದಿರುವ ಮತ್ತು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಡ್ಯಾನ್ಸಿಂಗ್ ಫ್ಲೋ&zwnj;ರ್ ಮನರಂಜನಾ ಯಂತ್ರವು ಚಾಲನೆಯಲ್ಲಿ ಇದ್ದಾಗಲೇ ತಾಂತ್ರಿಕ ದೋಷದಿಂದ ಮುರಿದು ಬಿದ್ದು 21 ಜನರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ಜರುಗಿದ್ದು, ಘಟನೆ ಸಂಬಂಧಿಸಿದಂತೆ ಜಾತ್ರಾ ಕಮಿಟಿ ಅಧ್ಯಕ್ಷರು ಸೇರಿದಂತೆ 7 ಜನರ ಮೇಲೆ ಸೋಮವಾರ ಶಹರ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.&lt;/p&gt;&lt;p&gt;ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಯಂತ್ರವು ವೇಗವಾಗಿ ತಿರುಗುತ್ತಿದ್ದಾಗ ಅದರ ಕಬ್ಬಿಣದ ಸಲಾಕೆಗಳು ಹಾಗೂ ಪಾರ್ಶ್ವದ ಭಾಗಗಳು ಇದ್ದಕ್ಕಿದ್ದಂತೆ ಮುರಿದಿವೆ. ಪರಿಣಾಮವಾಗಿ ಯಂತ್ರದಲ್ಲಿದ್ದವರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ತೀವ್ರ ಸ್ವರೂಪದ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 6 ವರ್ಷದ ಮಗು ಸೇರಿ ಮಹಿಳೆಯರು ಮತ್ತು ವಯಸ್ಕರು ಇದ್ದಾರೆ.&lt;/p&gt;&lt;h2&gt;&lt;strong&gt;ದೂರು ದಾಖಲು&lt;/strong&gt;&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತ್ರಾ ಸಮಿತಿ ಅಧ್ಯಕ್ಷರು, ಮ್ಯಾನೇಜ&zwnj;ರ್ ಹಾಗೂ ಡ್ಯಾನ್ಸಿಂಗ್ ಫ್ಲೋ&zwnj;ರ್ ಮಾಲೀಕರು ಸೇರಿದಂತೆ ಏಳು ಜನ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.&lt;/p&gt;&lt;p&gt;ಪರಶುರಾಮ ಸಮಗಾರ, ವಿಶ್ವನಾಥ ದೊಡ್ಡಮನಿ, ನೂರಅಹ್ಮದ ಧಾರವಾಡ, ನಾರಾಯಣ ದೊಡ್ಡಮನಿ, ಮಲ್ಲು ಬಾದನ, ವಿನಾಯಕ ಮಾನ್ವಿ (ಜಾತ್ರಾ ಕಮಿಟಿ ಅಧ್ಯಕ್ಷ), ಎಂ.ಎಸ್. ಅಂಗಡಿ (ತೋಂಟದಾರ್ಯ ಮಠದ ಮ್ಯಾನೇಜರ್) ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆಯಲ್ಲಿ ಜಹೀರ ಅಹ್ಮದ್ ಖಾಜಿ (42), ಕಲಂದರ ಖಾಜಿ (15), ಶಿಫಾ ಖಾಜಿ (16), ಸಮೀನಾ ಗಂಗಾವತಿ (18), ಸನಾ ಖಾಜಿ (15), ಸಗುಪ್ತಾ ಖಾಜಿ (14), ಜ್ಯೋತಿ ಗಬ್ಬೂರ (18), ನಾಜಿಯಾ ತೋಟಿಗಾರ (20), ಕಿರಣ ಹುಲ್ಲೂರ (25), ದೀಪಕ ಹುಬ್ಬಳ್ಳಿ (29), ರಾಜೇಸಾಬ ಅಣ್ಣಿಗೇರಿ (23), ಸುಮನ್ ನವಲಗುಂದ (28), ವಿಶಾಲ ನವಲಗುಂದ (6), ಸಲ್ಮಾ ಹಂದೂರ (17), ಖುಷಿ ದಲಬಂಜನ (14), ಕಿರಣ ಕಬಾಡಿ (21), ಮಾಹೀನ್ ಕಂದಗಲ್ (10), ರುಬಿನಾ ಕಂದಗಲ್ (36), ಮುಸ್ತಾಕ ಹಳೆಮನಿ (25), ಪ್ರದೀಪಕುಮಾರ ಕಮ್ಮಾರ (25), ಸತೀಶ ಗಬ್ಬೂರ (22) ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಅಂಗಡಿಗಳ ತೆರವು&lt;/strong&gt;&lt;/h3&gt;&lt;p&gt;ಘಟನಾ ಸ್ಥಳದಲ್ಲಿದ್ದ ಅಂಗಡಿಗಳನ್ನು ಸೋಮವಾರ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಇನ್ನುಳಿದ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಭಾನುವಾರ ರಾತ್ರಿ ಘಟನೆ ನೆನೆದು ಜನರು ಬೇಸರ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿಗೆ ಸಂಬಂಧಿಸಿದ ವಿಶೇಷ ಸುದ್ದಿ; ಗ್ರಾಮಸ್ಥರು ತಿಳಿದುಕೊಳ್ಳಲೇಬೇಕಾದ ನ್ಯೂಸ್&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/huge-toy-machine-collapses-injuring-22-people-criminal-case-against-gadag-tontadarya-jatra-committee-mrq/articleshow-6mdfo47"/>
        </item>
        <item>
            <title><![CDATA[ಲಕ್ಕುಂಡಿಯ 100 ಗುಡಿ, 100 ಬಾವಿಗಳ ಪತ್ತೆಗಾಗಿ ಉತ್ಖನನ; ಈವರೆಗೆ ಸಿಕ್ಕಿದ್ದೆಷ್ಟು?]]></title>
            <link>https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23</link>
            <guid isPermaLink="true">https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23</guid>
            <pubDate>Sun, 17 May 2026 09:09:32 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 100 ಗುಡಿಗಳು ಮತ್ತು 100 ಬಾವಿಗಳ ಪತ್ತೆಗಾಗಿ ಉತ್ಖನನ ನಡೆಯುತ್ತಿದೆ. ಈವರೆಗೆ 32 ಗುಡಿಗಳು ಮತ್ತು 36 ಬಾವಿಗಳು ಪತ್ತೆಯಾಗಿದ್ದು, ಉಳಿದವುಗಳ ಶೋಧ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಪ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgk50ngn48wtx2v1eenpye8m,imgname-lakkundi-1770169325077.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 100 ಗುಡಿಗಳು ಮತ್ತು 100 ಬಾವಿಗಳ ಪತ್ತೆಗಾಗಿ ಉತ್ಖನನ ನಡೆಯುತ್ತಿದೆ. ಈವರೆಗೆ 32 ಗುಡಿಗಳು ಮತ್ತು 36 ಬಾವಿಗಳು ಪತ್ತೆಯಾಗಿದ್ದು, ಉಳಿದವುಗಳ ಶೋಧ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಪ&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಈವರೆಗೆ 32 ದೇವರ ಗುಡಿಗಳು ಹಾಗೂ 36 ಬಾವಿಗಳನ್ನು ಪತ್ತೆ ಮಾಡಿದ್ದು, ಇನ್ನೂ 68 ಗುಡಿಗಳು ಮತ್ತು 64 ಬಾವಿಗಳನ್ನು ಉತ್ಖನನ ಮಾಡಬೇಕಿದೆ. ಆ ಉತ್ಖನನ ಕಾರ್ಯಕ್ಕೆ ಶೀಘ್ರ ಚಾಲನೆ ನೀಡಲಾಗುತ್ತಿದ್ದು, ಈ ವರ್ಷದ ಡಿಸೆಂಬರ್&zwnj; ಅಂತ್ಯದೊಳಗೆ ಉತ್ಖನನ ಕಾರ್ಯ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್&zwnj;.ಕೆ. ಪಾಟೀಲ್&zwnj; ತಿಳಿಸಿದರು.&lt;/p&gt;&lt;img&gt;&lt;p&gt;ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್&zwnj;.ಕೆ. ಪಾಟೀಲ್&zwnj;, ಲಕ್ಕುಂಡಿಯನ್ನು 100 ದೇವರ ಗುಡಿಗಳು ಮತ್ತು 100 ಬಾವಿಗಳಿರುವ ಸ್ಥಳ ಎಂದು ಕರೆಯಲಾಗುತ್ತದೆ. ಅವುಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದರಂತೆ ಕಳೆದೆರಡು ವರ್ಷಗಳಿಂದೀಚೆಗೆ ಉತ್ಖನನ ಕಾರ್ಯ ನಡೆಸಲಾಗುತ್ತಿದ್ದು, ಈವರೆಗೆ 32 ದೇವರ ಗುಡಿಗಳು ಹಾಗೂ 36 ಬಾವಿಗಳನ್ನು ಪತ್ತೆ ಮಾಡಲಾಗಿದೆ. ಉಳಿದವುಗಳ ಪತ್ತೆಗೆ ಉತ್ಖನನ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ ಎಂದರು.&lt;/p&gt;&lt;img&gt;&lt;p&gt;ಲಕ್ಕುಂಡಿಯಲ್ಲಿ ಕಳೆದೊಂದು ವರ್ಷದಿಂದ 3 ಸಾವಿರಕ್ಕೂ ಹೆಚ್ಚಿನ ಪ್ರಾಚ್ಯಾವಶೇಷಗಳು ಸಂಗ್ರಹವಾಗಿವೆ. ಅದರಲ್ಲೂ ಕಳೆದ 12 ದಿನಗಳಲ್ಲಿಯೇ 1500 ಪ್ರಾಚ್ಯಾವಶೇಷಗಳು ಪತ್ತೆಯಾಗಿ, ಅವನ್ನು ಸಂಸ್ಕರಿಸಲಾಗಿದೆ. ಇನ್ನು, ಲಕ್ಕುಂಡಿ ಗ್ರಾಮಸ್ಥರೇ 1500ಕ್ಕೂ ಹೆಚ್ಚಿನ ಪ್ರಾಚ್ಯಾವಶೇಷಗಳನ್ನು ನಮಗೆ ನೀಡಿದ್ದಾರೆ. ಮತ್ತಷ್ಟು ಉತ್ಖನನ ನಡೆಸಿ ಪ್ರಾಚ್ಯವಸ್ತುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಂಪಿ ಉತ್ಖನನ: ಪುರಾತನ ದೇವಾಲಯದ ಕಲ್ಲಿನ ಚಾವಣಿ, ಅಪರೂಪದ ಆನೆಯ ಕಲಾಕೃತಿಗಳು ಪತ್ತೆ&lt;/strong&gt;&lt;/p&gt;&lt;img&gt;&lt;p&gt;ಲಕ್ಕುಂಡಿಯಲ್ಲಿ ಹೊಯ್ಸಳ, ಚಾಲುಕ್ಯ, ವಿಜಯನಗರ ಸಾಮ್ರಾಜ್ಯದ ಅವಶೇಷಗಳು, ವಾಸ್ತುಶಿಲ್ಪಗಳಿವೆ. ಅವುಗಳನ್ನು ಪತ್ತೆ ಮಾಡಲಾಗುತ್ತಿದ್ದು, ಅವುಗಳ ಸಂರಕ್ಷಣೆಗಾಗಿ ತೆರೆದ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅದಕ್ಕೆ ಅಗತ್ಯ ಭೂಮಿಯನ್ನು ನಿಗದಿ ಮಾಡಲಾಗಿದೆ. ಹಾಗೆಯೇ, ಲಕ್ಕುಂಡಿಯನ್ನು ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸುವ ಸಲುವಾಗಿ ಯುನೆಸ್ಕೋಗೆ ಪ್ರಸ್ತಾವನೆಯನ್ನೂ ಕಳುಹಿಸಲಾಗುವುದು ಎಂದು ವಿವರಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ವಾರಂಗಲ್ ಹಿಂದಿಕ್ಕಿ, ಐತಿಹಾಸಿಕ ದಾಖಲೆ ಬರೆಯುತ್ತ ಹೆಜ್ಜೆಯಿಟ್ಟ ಲಕ್ಕುಂಡಿ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/excavations-are-underway-to-uncover-100-temples-and-100-wells-in-lakkundi-gadag-district-mrq-6tafr23"/>
        </item>
        <item>
            <title><![CDATA[ರಾಜ್ಯದ 12 ಜಿಲ್ಲೆಗಳಿಗೆ 'ಎಲ್ಲೋ ಅಲರ್ಟ್': ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಸಾಧ್ಯತೆ!]]></title>
            <link>https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</link>
            <guid isPermaLink="true">https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv</guid>
            <pubDate>Thu, 16 Apr 2026 19:23:32 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ 'ಎಲ್ಲೋ ಅಲರ್ಟ್' ಘೋಷಿಸಿದೆ. ಈ ಅವಧಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knds8w34zxderfy8e77w0egc,imgname-delhi-ncr-weather-alert-rain-hailstorm-thunderstorm-western-disturbance-imd-warning-wind-speed-storm-india-4-1775357948004.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ.16): &lt;/strong&gt;ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಮೂರು ಗಂಟೆಗಳ ಕಾಲ 12 ಜಿಲ್ಲೆಗಳಲ್ಲಿ 'ಎಲ್ಲೋ ಅಲರ್ಟ್' ಘೋಷಿಸಿದೆ. ವಾತಾವರಣದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.&lt;/p&gt;&lt;h2&gt;&lt;strong&gt;ಎಲ್ಲೆಲ್ಲಿ ಅಲರ್ಟ್ ಘೋಷಿಸಲಾಗಿದೆ?&lt;/strong&gt;&lt;/h2&gt;&lt;p&gt;ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈ ಎಚ್ಚರಿಕೆ ಅನ್ವಯವಾಗಲಿದೆ.&lt;/p&gt;&lt;h2&gt;&lt;strong&gt;ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ&lt;/strong&gt;&lt;/h2&gt;&lt;p&gt;ಕೇವಲ ಸಾಧಾರಣ ಮಳೆಯಲ್ಲದೆ, ಗಾಳಿಯ ವೇಗ ಹೆಚ್ಚಿರಲಿದ್ದು ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಇದರಿಂದ ಕೃಷಿ ಭೂಮಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಗುಡುಗು ಸಹಿತ ಮಳೆ ಬರುವಾಗ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ. ಬಿರುಗಾಳಿಯ ತೀವ್ರತೆಗೆ ಹಳೆಯ ಕಟ್ಟಡಗಳು ಹಾಗೂ ದುರ್ಬಲ ಮರಗಳು ಉರುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಲು ಜಿಲ್ಲಾಡಳಿತಗಳು ಸೂಚಿಸಿವೆ.&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>gadag</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/karnataka-weather-update-yellow-alert-12-districts-hailstorm-warning-imd-san/articleshow-eoax3kv"/>
        </item>
        <item>
            <title><![CDATA[ಉನ್ನತ ಶಿಕ್ಷಣಕ್ಕಾಗಿ ಗಜೇಂದ್ರಗಡ, ರೋಣ ತಾಲೂಕಿನ ವಿದ್ಯಾರ್ಥಿಗಳ ಪರದಾಟ; ಪೋಷಕರಿಗೆ ಆರ್ಥಿಕ ಹೊರೆ]]></title>
            <link>https://kannada.asianetnews.com/karnataka-districts/gadag-students-from-gajendragada-and-rona-taluks-march-for-higher-education-mrq/articleshow-fczcnoa</link>
            <guid isPermaLink="true">https://kannada.asianetnews.com/karnataka-districts/gadag-students-from-gajendragada-and-rona-taluks-march-for-higher-education-mrq/articleshow-fczcnoa</guid>
            <pubDate>Mon, 27 Apr 2026 07:59:04 +0530</pubDate>
            <description><![CDATA[&lt;p&gt;ಗಜೇಂದ್ರಗಡ ತಾಲೂಕಿನ ವಿದ್ಯಾರ್ಥಿಗಳು SSLCಯಲ್ಲಿ ಉತ್ತಮ ಅಂಕ ಗಳಿಸುತ್ತಿದ್ದರೂ, ಉನ್ನತ ವ್ಯಾಸಂಗಕ್ಕೆ ಸ್ಥಳೀಯವಾಗಿ ಉತ್ತಮ ಕಾಲೇಜುಗಳಿಲ್ಲ. ಈ ಕಾರಣದಿಂದ ಪ್ರವೀಣಕುಮಾರ ಸೊಬಗಿನರಂತಹ ಪ್ರತಿಭೆಗಳು ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಇದು ಪಾಲಕರಿಗೆ ಆರ್ಥಿಕ ಹೊರೆಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq6c6ta1a4bxaqa1nry52wbq,imgname-students--1777256851777.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಎಂ. ಸೈಯದ್&lt;/strong&gt;&lt;/p&gt;&lt;p&gt;&lt;strong&gt;ಗದಗ : &lt;/strong&gt;ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಛಾಪು ಮೂಡಿಸಿದ ತಾಲೂಕಿನ ಸೂಡಿ ಗ್ರಾಮದ ಪ್ರವೀಣಕುಮಾರ ಸೊಬಗಿನ ಸಾಧನೆಗೆ ಶಹಭಾಶ್&zwnj;ಗಿರಿ ಜತೆಗೆ ಜಿಲ್ಲೆ ಸೇರಿ ನೆರೆಯ ಜಿಲ್ಲೆಗಳಿಂದ ಉಚಿತ ಪ್ರವೇಶದ ಆಹ್ವಾನಗಳು ಬರುತ್ತಿವೆ. ಆದರೆ, ಉತ್ತಮ ಅಂಕ ಪಡೆದರೂ ಗಜೇಂದ್ರಗಡ ಹಾಗೂ ರೋಣ ತಾಲೂಕಿನ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಅನ್ಯ ಜಿಲ್ಲೆಗಳಿಗೆ ತೆರಳುವ ದುಸ್ಥಿತಿಯಿದೆ.&lt;/p&gt;&lt;p&gt;ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿರುವ ಎಸ್ಸೆಸ್ಸೆಲ್ಸಿಯಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಫಲಿತಾಂಶವನ್ನು ತಾಲೂಕು ದಾಖಲಿಸುತ್ತಿದೆ. ಇತ್ತೀಚೆಗೆ ಪ್ರಕಟವಾದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕಿನ ಇಟಗಿ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಪ್ರವೀಣಕುಮಾರ ಸೊಬಗಿನ 625ಕ್ಕೆ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಪ್ರತಿಭೆಗಳ ಸಾಲು&lt;/strong&gt;&lt;/h2&gt;&lt;p&gt;2021ರ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗಜೇಂದ್ರಗಡದ ಕಿರಣ ತಾಳಿಕೋಟಿ 625ಕ್ಕೆ 625 ಅಂಕದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಗೋಗೇರಿ ಗ್ರಾಮದ ಸರ್ಕಾರಿ ಶಾಲೆಯ ಪ್ರತಿಭಾ ಮುತ್ತಪ್ಪ ಸೊಬರದ ವಿದ್ಯಾರ್ಥಿನಿ 2022ನೇ ಸಾಲಿನಲ್ಲಿ 625ಕ್ಕೆ 622 ಅಂಕ ಗಳಿಸಿದ್ದರು. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಿರಣ ತಾಳಿಕೋಟಿ ಬೆಳಗಾವಿಯಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರೆ, ಪ್ರತಿಭಾ ಮುತ್ತಪ್ಪ ಸೊಬರದ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪಟ್ಟಿ ಹೆಚ್ಚಾಗುತ್ತದೆ.&lt;/p&gt;&lt;p&gt;ಆದರೆ ಜಿಲ್ಲೆ ಹಾಗೂ ರಾಜ್ಯವೇ ತಿರುಗಿ ತಾಲೂಕಿನತ್ತ ನೋಡುವ ಫಲಿತಾಂಶ ಬಂದರೂ ಉನ್ನತ ವ್ಯಾಸಂಗದ ಕನಸನ್ನು ಈಡೇರಿಸಿಕೊಳ್ಳಲು ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಅನೇಕ ವಿದ್ಯಾರ್ಥಿಗಳ ಕನಸನ್ನು ಕಮರುವಂತೆ ಮಾಡುತ್ತಿದೆ.&lt;/p&gt;&lt;h3&gt;&lt;strong&gt;ಆರ್ಥಿಕ ಸಂಕಷ್ಟ&lt;/strong&gt;&lt;/h3&gt;&lt;p&gt;ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಗನಿಗೆ ಉಚಿತ ಪ್ರವೇಶ ನೀಡಲು ಅನೇಕ ಕಾಲೇಜುಗಳು ಸಂಪರ್ಕಿಸುತ್ತಿವೆ. ಆದರೆ ಮುಂದಿನ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಂಕಷ್ಟ ಚಿಂತೆಗೆ ದೂಡಿದೆ ಎಂದು ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಬಂದ ವಿದ್ಯಾರ್ಥಿಯ ತಾಯಿ ಲಲಿತಾ ಈರಪ್ಪ ಸೊಬಗಿನ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಜೇಂದ್ರಗಡದಲ್ಲಿ ಯುರೋಪ್, ಮಧ್ಯ ಏಷ್ಯಾದ ವಲಸೆ ಹಕ್ಕಿ 'ಸಣ್ಣ ಕೊಂಬಿನ ಗೂಬೆ' ಗೋಚರ!&lt;/strong&gt;&lt;/p&gt;&lt;h3&gt;&lt;strong&gt;ಅನುಕೂಲ&lt;/strong&gt;&lt;/h3&gt;&lt;p&gt;2022ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 622 ಅಂಕ ಪಡೆದ ನನ್ನ ಮಗಳು ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ. ತಾಲೂಕಿನಲ್ಲಿಯೇ ಉನ್ನತ ವ್ಯಾಸಂಗ ಕೇಂದ್ರಗಳಿದ್ದರೆ ಮತ್ತಷ್ಟು ಪಾಲಕರಿಗೆ, ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂದು ಗೋಗೇರಿ ಗ್ರಾಮದ ಮುತ್ತಪ್ಪ ಸೊಬರದ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಜೇಂದ್ರಗಡದಲ್ಲಿ 'ಥರ್ಡ್ ಐ' ತಪ್ಪಿಸಲು ವಾಹನ ಸವಾರರ ವಾಮಮಾರ್ಗ! ಸಫಲವಾಗದ ಸುಗಮ ಸಂಚಾರ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-students-from-gajendragada-and-rona-taluks-march-for-higher-education-mrq/articleshow-fczcnoa"/>
        </item>
        <item>
            <title><![CDATA[NWKRTC: ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ ಬಸ್ ಸಂಚಾರ; ವೇಳಾ ಪಟ್ಟಿ ಹೀಗಿದೆ]]></title>
            <link>https://kannada.asianetnews.com/karnataka-districts/non-stop-rajahamsa-bus-service-between-hubballi-and-gadag-nwkrtc-service-mrq/articleshow-gi8p3n6</link>
            <guid isPermaLink="true">https://kannada.asianetnews.com/karnataka-districts/non-stop-rajahamsa-bus-service-between-hubballi-and-gadag-nwkrtc-service-mrq/articleshow-gi8p3n6</guid>
            <pubDate>Mon, 13 Apr 2026 17:01:53 +0530</pubDate>
            <description><![CDATA[&lt;p&gt;ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಮತ್ತು ಗದಗ ನಡುವೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ತಡೆ ರಹಿತ ರಾಜಹಂಸ ಬಸ್ ಸಂಚಾರವನ್ನು ಆರಂಭಿಸಿದೆ. ಈ ಹೊಸ ಸೇವೆಯು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kp39d0s11arefqj2bysmzs9r,imgname-hubblalli-gadag-1776079504161.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ವಿವಿಧ ಕೆಲಸ ಕಾರ್ಯಗಳಿಗಾಗಿ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ ಬಸ್&zwnj; ಸಂಚಾರ ಆರಂಭಿಸಲಾಗಿದೆ.&lt;/p&gt;&lt;h2&gt;&lt;strong&gt;ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಸಂಸ್ಥೆ&lt;/strong&gt;&lt;/h2&gt;&lt;p&gt;ವಾಣಿಜ್ಯ, ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕೆಲಸ ಕಾರ್ಯಗಳಿಗಾಗಿ ಪ್ರತಿ ದಿನ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಹಾಗೂ ಗದಗ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣ ಮಾಡುತ್ತಾರೆ. ಅವರಿಗೆ ಅನುಕೂಲವಾಗುವಂತೆ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳಿ-ಗದಗ ನಡುವೆ ಪ್ರಾಯೋಗಿಕವಾಗಿ ತಡೆ ರಹಿತ ರಾಜಹಂಸ ಬಸ್&zwnj;ಗಳ ಸಂಚಾರವನ್ನು ಆರಂಭಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ ಏರಿಕೆ ಇಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನ&lt;/strong&gt;&lt;/p&gt;&lt;h3&gt;&lt;strong&gt;ವೇಳಾ ಪಟ್ಟಿ&lt;/strong&gt;&lt;/h3&gt;&lt;p&gt;ಹುಬ್ಬಳ್ಳಿಯಿಂದ ಗದಗಗೆ ಬೆಳಗ್ಗೆ 8, 8-30, 9 ಮಧ್ಯಾಹ್ನ 12, 12-30, 1 ಸಂಜೆ 4, 4-30 ಹಾಗೂ 5. ಗದಗದಿಂದ ಹುಬ್ಬಳ್ಳಿಗೆ ಬೆಳಗ್ಗೆ 10, 10-30, 11 ಮಧ್ಯಾಹ್ನ 2, 2-30, 3 ಸಂಜೆ 5-30, 6 ಹಾಗೂ 6-30. ಅಪಘಾತ ಪರಿಹಾರ ವಿಮೆ, ಟೋಲ್ ಫೀ ಇತ್ಯಾದಿ ಸೇರಿದಂತೆ ಒಟ್ಟು ಪ್ರಯಾಣ ದರ ₹100 ನಿಗದಿಪಡಿಸಲಾಗಿದೆ. ಈ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸಂಪುಟ ಪುನಾರಚನೆ ಮಾಡೋದು ಹೈಕಮಾಂಡ್&zwnj;ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ&lt;/strong&gt;&lt;/p&gt;&lt;p&gt;&amp;nbsp;&lt;/p&gt;&lt;p&gt;ದೂದಿಹಳ್ಳಿ ಗ್ರಾಮದ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ನಂದಿ ಮೂರ್ತಿ ಪತ್ತೆಯಾಗಿದೆ. ಮೂರ್ತಿ 3 ಅಡಿ ಎತ್ತರವಿದೆ. ಮೂರ್ತಿ ಸಿಗುತ್ತಿದ್ದಂತೆ ಗ್ರಾಮಸ್ಥರು ಶುಚಿಗೊಳಿಸಿದ್ದಾರೆ. ನಂತರ ಮೂರ್ತಿಗೆ ಗ್ರಾಮದ ಜನರು ಪೂಜೆ ಸಲ್ಲಿಸಿದ್ದಾರೆ.#Haveri #Lake #NandiIdol https://t.co/1wWrifi7TJ&lt;/p&gt;&lt;p&gt;&mdash; Asianet Suvarna News (@AsianetNewsSN) April 13, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/non-stop-rajahamsa-bus-service-between-hubballi-and-gadag-nwkrtc-service-mrq/articleshow-gi8p3n6"/>
        </item>
        <item>
            <title><![CDATA[ಕಾಂಗ್ರೆಸ್ಸಿನಲ್ಲಿ ಗಾಂಧಿ ಕುಟುಂಬದ ಮನಸ್ಸು ಗೆದ್ದವರು ಸಿಎಂ ಆಗ್ತಾರೆ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/karnataka-districts/basavaraj-bommai-congress-cm-high-command-controversy-gvd/articleshow-mrnrxa9</link>
            <guid isPermaLink="true">https://kannada.asianetnews.com/karnataka-districts/basavaraj-bommai-congress-cm-high-command-controversy-gvd/articleshow-mrnrxa9</guid>
            <pubDate>Mon, 04 May 2026 20:00:08 +0530</pubDate>
            <description><![CDATA[&lt;p&gt;ಕಾಂಗ್ರೆಸ್ಸಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೆಯೋ ಅವರು ಸಿಎಂ ಆಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h09h6p8d77a57yjcyxg0k1ff,imgname-Who-is-Basavaraj-Bommai-1683947215117.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮೇ.04): &lt;/strong&gt;ಕಾಂಗ್ರೆಸ್ಸಿನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೆಯೋ ಅವರು ಸಿಎಂ ಆಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ವಿಪರೀತ ಅಧಿಕಾರದ ಆಸೆಯಿಂದ ಕಾಂಗ್ರೆಸ್&zwnj; ನಾಯಕರಲ್ಲಿ ತಿಕ್ಕಾಟ ಶುರುವಾಗಿದೆ. ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಮೂರು ಬಾರಿ ಗೆದ್ದಿದ್ದೇವೆ, ನಮಗೆ ಸಚಿವ ಸ್ಥಾನ ಕೊಡಿ ಅಂತ ಕೇಳುತ್ತಾರೆ. ಹೊಸಬರು ತಮಗೂ ಸಚಿವ ಸ್ಥಾನ ಕೇಳುತ್ತಿದ್ದಾರೆ.&lt;/p&gt;&lt;p&gt;ಮುಖ್ಯಮಂತ್ರಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಬಹಳ ಹಿರಿಯರು. ಅವರು ತಮಗೆ ನ್ಯಾಯಸಮ್ಮತವಾಗಿ ಸಿಎಂ ಸ್ಥಾನ ಸಿಗಬೇಕು ಎಂಬ ನೋವು ಅವರ ಮನಸ್ಸಿನಲ್ಲಿದೆ. ಅದಕ್ಕಾಗಿ ಆ ಭಾವನೆ ವ್ಯಕ್ತಪಡಿಸಿದ್ದಾರೆ ಎಂದರು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅಂತಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಂತಾರೆ. ಇದೊಂದು ಕುಟುಂಬ ಆಧರಿತ ಪಕ್ಷ ಎಂದು ಲೇವಡಿ ಮಾಡಿದರು.&lt;/p&gt;&lt;p&gt;ಸಿದ್ದರಾಮಯ್ಯ ಅವರು ಕಳೆದ ಬಜೆಟ್&zwnj;ನಲ್ಲಿ ನೀಡಿದ್ದ ಸುಮಾರು ₹14 ಸಾವಿರ ಕೋಟಿ ಬಳಕೆ ಮಾಡಿಲ್ಲ. ಅದರ ಹಿಂದಿನ ವರ್ಷವೂ ಸುಮಾರು ₹10 ಸಾವಿರ ಕೋಟಿ ಬಳಕೆಯಾಗಿಲ್ಲ. ರಾಜಕೀಯವಾಗಿ ತಿಕ್ಕಾಟ ಮಾಡಿದರೆ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಾರೆ? ಮುಖ್ಯಮಂತ್ರಿ ಒಂದು ಹೇಳಿದರೆ, ಉಪಮುಖ್ಯಮಂತ್ರಿ ಮತ್ತೊಂದು ಹೇಳುತ್ತಾರೆ, ಜನರ ದೃಷ್ಟಿಯಿಂದ ಈ ಸರ್ಕಾರ ಸಂಪೂರ್ಣ ನಿಂತು ಹೋಗಿದೆ ಎಂದು ಆರೋಪಿಸಿದರು.&lt;/p&gt;&lt;h2&gt;&lt;strong&gt;ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹650 ಕೋಟಿ: ಆಕ್ಷೇಪ&lt;/strong&gt;&lt;/h2&gt;&lt;p&gt;ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗಾಗಿ ₹650 ಕೋಟಿಗಳನ್ನು ನೀಡಬೇಕೆಂದು ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇದೊಂದು ತುಘಲಕ್ ಸರ್ಕಾರದ ತೀರ್ಮಾನವಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ. ಹಿರೇಮಠ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಚಿವ ಸಂಪುಟದ ಸಭೆಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತೆ ₹650 ಕೋಟಿ ನೀಡಲು ತೀರ್ಮಾನ ಕೈಗೊಂಡಿದ್ದು, ಈ ಕಾಂಗ್ರೆಸ್&zwnj; ಸರ್ಕಾರ ಪದೇ ಪದೇ ಅಲ್ಪಸಂಖ್ಯಾತರನ್ನು ಓಲೈಸಲು ಹಣವನ್ನು ನೀಡುತ್ತಿದೆ.&lt;/p&gt;&lt;p&gt;ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಮತಗಳನ್ನು ಹಾಕಿಲ್ಲವೇ? ಮೇಲಿಂದ ಮೇಲೆ ಹಿಂದೂಗಳಿಗೆ ಅಪಮಾನವನ್ನು ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಈ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಹಿಂದೂಗಳ ಅಭಿವೃದ್ಧಿಗಾಗಿ 1 ಪೈಸೆಯನ್ನು ಕೂಡ ಕೊಡದೇ ಕೇವಲ ಅಲ್ಪಸಂಖ್ಯಾತರ ಓಲೈಸಲು ಪ್ರತಿವರ್ಷ ಸಾವಿರಾರು ಕೋಟಿ ರುಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/basavaraj-bommai-congress-cm-high-command-controversy-gvd/articleshow-mrnrxa9"/>
        </item>
        <item>
            <title><![CDATA[ಕಾಂಗ್ರೆಸ್‌ಗೆ ತಟ್ಟಲಿದೆ ಮಹಿಳೆಯರ ಶಾಪ: ಶಾಸಕ ಸಿ.ಸಿ.ಪಾಟೀಲ ವಿವಾದಾತ್ಮಕ ಹೇಳಿಕೆ!]]></title>
            <link>https://kannada.asianetnews.com/karnataka-districts/cc-patil-slams-congress-women-reservation-bill-issue-gvd/articleshow-p82aomp</link>
            <guid isPermaLink="true">https://kannada.asianetnews.com/karnataka-districts/cc-patil-slams-congress-women-reservation-bill-issue-gvd/articleshow-p82aomp</guid>
            <pubDate>Wed, 22 Apr 2026 18:30:54 +0530</pubDate>
            <description><![CDATA[&lt;p&gt;ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸಿರುವ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದೇಶದ ಮಹಿಳೆಯರು ತೀವ್ರ ಆಕ್ರೋಶ ಹೊಂದಿದ್ದು, ಅವರಿಗೆ ಮಹಿಳೆಯರ ಶಾಪ ತಟ್ಟಲಿದೆ ಎಂದು ಶಾಸಕ ಸಿ.ಸಿ.ಪಾಟೀಲ ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g6dzg777vb0zyjcygn17rz1r,imgname-cc-patil.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಏ.22):&lt;/strong&gt; ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸಿರುವ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದೇಶದ ಮಹಿಳೆಯರು ತೀವ್ರ ಆಕ್ರೋಶ ಹೊಂದಿದ್ದು, ಅವರಿಗೆ ಮಹಿಳೆಯರ ಶಾಪ ತಟ್ಟಲಿದೆ ಎಂದು ಶಾಸಕ ಸಿ.ಸಿ.ಪಾಟೀಲ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಸಮಾನ ಹಕ್ಕು, ಪ್ರಾತಿನಿಧ್ಯ ಹೆಚ್ಚಿಸುವ ಮೂಲಕ ರಾಷ್ಟ್ರದಲ್ಲಿ ಮಹಿಳೆಯರ ಶಕ್ತಿಯನ್ನು ಉಪಯೋಗ ಮಾಡಿಕೊಳ್ಳುವ ಕನಸು ಕಂಡಿದ್ದರು.&lt;/p&gt;&lt;p&gt;ಆದರೆ, ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸುವ ಮೂಲಕ ಹರ್ಷ ವ್ಯಕ್ತಪಡಿಸಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದರು. ದೇಶದ ಜನಸಂಖ್ಯೆ 140 ಕೋಟಿ ದಾಟುತ್ತಿರುವುದರಿಂದ ಸಂಸದರ ಸಂಖ್ಯೆ ಹೆಚ್ಚಿಸುವುದು ಅನಿವಾರ್ಯವಾಗಿತ್ತು. ಆದರೆ, ಕಾಂಗ್ರೆಸ್&zwnj; ಹಾಗೂ ಅದರ ಮೈತ್ರಿ ಪಕ್ಷಗಳು ಕ್ಷೇತ್ರ ಮರುವಿಂಗಡಣೆ ಜತೆಗೆ ಮಹಿಳೆಯರಿಗೆ ಸಿಗಬೇಕಿದ್ದ ಶೇ. 33ರಷ್ಟು ಮೀಸಲಾತಿಗೂ ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ.&lt;/p&gt;&lt;p&gt;ಅಲ್ಲದೇ, ತಾಯಂದಿರ ಕನಸನ್ನು ಭಗ್ನಗೊಳಿಸಿದ್ದಾರೆ ಎಂದು ಕಾಂಗ್ರೆಸ್&zwnj; ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಜಾರಿಗೆ ತಂದ ಅನೇಕ ಯೋಜನೆಗಳಿಗೆ ಕಾಂಗ್ರೆಸ್&zwnj; ಹಾಗೂ ಅದರ ಮೈತ್ರಿ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಲೇ ಬಂದಿವೆ ಎಂದು ಪಟ್ಟಿಯನ್ನೇ ಓದಿ ಹೇಳಿದರು.&lt;/p&gt;&lt;h2&gt;&lt;strong&gt;ರಾಜಕೀಯ ಕಿಚ್ಚು&lt;/strong&gt;&lt;/h2&gt;&lt;p&gt;ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್&zwnj;ವಿಂಗಡಣೆ ವಿಷಯವನ್ನು ಪ್ರತ್ಯೇಕವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ವಿಧೇಯಕವನ್ನು ಸೋಲಿಸುವ ಮೂಲಕ ಮಹಿಳೆಯರ ಜತೆಗೆ ವಿವಿಧ ರಾಜ್ಯಗಳ ಜನರಿಗೂ ಅನ್ಯಾಯವಾಗಿದೆ. ಆದರೆ, ಬಿಜೆಪಿ ಮುಂದಿನ ದಿನಗಳಲ್ಲಿ ಇನ್ನಷ್ಟು ಬಲವಾಗಿ ಮಹಿಳಾ ಮೀಸಲಾತಿ ಬಿಲ್ಲನ್ನು ಜಾರಿಗೆ ತರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/cc-patil-slams-congress-women-reservation-bill-issue-gvd/articleshow-p82aomp"/>
        </item>
        <item>
            <title><![CDATA[ಗದಗ: ಕಾರು ಚಾಲಕನ ನಿದ್ದೆ ಮಂಪರಿಗೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪಾದಚಾರಿಗಳು ಬಲಿ]]></title>
            <link>https://kannada.asianetnews.com/state/two-killed-as-car-loses-control-and-runs-over-pedestrians-in-gadag/articleshow-q0dpwv5</link>
            <guid isPermaLink="true">https://kannada.asianetnews.com/state/two-killed-as-car-loses-control-and-runs-over-pedestrians-in-gadag/articleshow-q0dpwv5</guid>
            <pubDate>Wed, 29 Apr 2026 10:34:18 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಾಲಕನ ನಿದ್ದೆ ಮಂಪರಿನಿಂದಾಗಿ ಕಾರೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqbsmggp006p9r917fkyscqr,imgname-acccident-in-gadag-1777438704149.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬೆಳ್ಳಂಬೆಳಗ್ಗೆ ವಾಕಿಂಗ್&zwnj;ಗೆ ಹೋದವರ ಪಾಲಿಗೆ ಮೃತ್ಯುವಾದ ಕಾರು.&lt;/strong&gt;&lt;/h2&gt;&lt;p&gt;ಗದಗ: ರಸ್ತೆ ಬದಿ ನಡೆದು ಹೋಗುತ್ತಿದ್ದ ಇಬ್ಬರು ಪಾದಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಕಾರು ಚಾಲಕನೋರ್ವ ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು 48 ವರ್ಷದ ಶಿವಾನಂದ ಹುಲಕೋಟಿ ಹಾಗೂ 40 ವರ್ಷದ ಅಶೋಕ್ ಸರ್ವಿ ಎಂದು ಗುರುತಿಸಲಾಗಿದೆ. ಈ ಕಾರು ಮಹಾರಾಷ್ಟ್ರದಿಂದ ಲಕ್ಷೇಶ್ವರಕ್ಕೆ ಬರುತ್ತಿತ್ತು.&lt;/p&gt;&lt;p&gt;ಚನ್ನಮ್ಮ ಸರ್ಕಲ್&zwnj;ಗೆ ಬರುತ್ತಿದ್ದಂತೆ ಕಾರು ಚಾಲಕನಿಗೆ ನಿದ್ದೆ ಮಂಪರು ಆಗಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹತ್ತಿದೆ. ಘಟನೆಯಲ್ಲಿ ಮತ್ತೊಬ್ಬ ಪಾದಚಾರಿಯೂ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ.&lt;/p&gt;&lt;h3&gt;&lt;strong&gt;ಒಳ್ಳೆ ಆರೋಗ್ಯಕ್ಕೆಂದು ವಾಕ್ ಹೋದವರು ಅಪಘಾತಕ್ಕೆ ಬಲಿಯಾದರು&lt;/strong&gt;&lt;/h3&gt;&lt;p&gt;ಅಪಘಾತದಲ್ಲಿ ಮೃತರಾದ ಅಶೋಕ್ ಹಾಗೂ ಶಿವಾನಂದ ಬೆಳಗಿನ ಜಾವ ಅಂಬೇಡ್ಕರ್ ಬಡಾವಣೆಯಿಂದ ವಾಕ್ ಬಂದಿದ್ದರು. ಅವರು ನಡೆದು ಬರುತ್ತಿದ್ದಾಗಲೇ ಏಕಾಏಕಿ ಎದುರಿಗೆ ಬಂದ ಹುಂಡೈ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬಿಸಿಲಿಗೆ ಬೆಂದ ಬೆಂಗಳೂರು ಜನರಿಗೆ ಸಿಹಿ ಸುದ್ದಿ: ಸಿಲಿಕಾನ್ ಸಿಟಿಯಲ್ಲಿ ತಂಪರೆಯಲಿರುವ ವರುಣ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Anusha Kb</dc:creator>
            <atom:link href="https://kannada.asianetnews.com/state/two-killed-as-car-loses-control-and-runs-over-pedestrians-in-gadag/articleshow-q0dpwv5"/>
        </item>
        <item>
            <title><![CDATA[ಬೆಂಗಳೂರು: 10 ಲಕ್ಷ ಲಂಚಕ್ಕೆ ಡಿಮ್ಯಾಂಡ್‌, ಹಣ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ವಿಲೇಜ್ ಅಕೌಂಟೆಂಟ್]]></title>
            <link>https://kannada.asianetnews.com/karnataka-districts/village-accountant-caught-red-handed-taking-bribe-by-lokayukta-in-bengaluru-gdp/articleshow-tse66gg</link>
            <guid isPermaLink="true">https://kannada.asianetnews.com/karnataka-districts/village-accountant-caught-red-handed-taking-bribe-by-lokayukta-in-bengaluru-gdp/articleshow-tse66gg</guid>
            <pubDate>Thu, 30 Apr 2026 17:27:09 +0530</pubDate>
            <description><![CDATA[ಬೆಂಗಳೂರಿನಲ್ಲಿ ಲಂಚ ಪಡೆಯುತ್ತಿದ್ದ ವಿಲೇಜ್ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದರೆ, ಗದಗದಲ್ಲಿ ಲೋಕಾಯುಕ್ತ ದಾಳಿಯಿಂದ ಮನನೊಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎರಡೂ ಘಟನೆಗಳು ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಮಾನಸಿಕ ಒತ್ತಡದ ಎರಡು ವಿಭಿನ್ನ ಮುಖಗಳನ್ನು ತೆರೆದಿಟ್ಟಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqf3z3ghdbesjsb7fnxm2q2e,imgname-begu-village-accountant-bribe-1777550200337.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು ಮತ್ತು ಗದಗ ಜಿಲ್ಲೆಗಳಲ್ಲಿ ಎರಡು ವಿಭಿನ್ನ ಘಟನೆಗಳು ಬೆಳಕಿಗೆ ಬಂದಿದ್ದು, ಒಂದು ಕಡೆ ಭ್ರಷ್ಟಾಚಾರದ ಪ್ರಕರಣದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದರೆ, ಇನ್ನೊಂದು ಕಡೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ದಾಳಿಗೆ ಮನನೊಂದು ಆತ್ಮ*ಹತ್ಯೆ ಮಾಡಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.&lt;/p&gt;&lt;h2&gt;ಬೇಗೂರು ನಾಡಕಚೇರಿಯಲ್ಲಿ ಲಂಚ ಪ್ರಕರಣ: ವಿಲೇಜ್ ಅಕೌಂಟೆಂಟ್ ಟ್ರ್ಯಾಪ್&lt;/h2&gt;&lt;p&gt;ಬೆಂಗಳೂರು ನಗರದ ಬೇಗೂರು ನಾಡಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿಲೇಜ್ ಅಕೌಂಟೆಂಟ್ ಮಂಜುನಾಥ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್&zwnj;ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಪೌತಿ ಖಾತೆ (Property Account) ವರ್ಗಾವಣೆಗೆ ಸಂಬಂಧಿಸಿದಂತೆ ಮಂಜುನಾಥ್ ಅವರು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ದೂರಲಾಗಿದೆ. ಈ ಸಂಬಂಧ ಮಂಗಮ್ಮನಪಾಳ್ಯದ ನಿವಾಸಿ ಶ್ರೀ ಚೇತನ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು.&lt;/p&gt;&lt;p&gt;ದೂರಿನ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮಂಜುನಾಥ್ ಅವರು ₹2 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಅವರನ್ನು ಸಿಕ್ಕಿಹಾಕಿದ್ದಾರೆ. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್&zwnj;ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಧಿಕಾರಿಗಳಿಂದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.&lt;/p&gt;&lt;h2&gt;ಗದಗದಲ್ಲಿ ಪಿಡಿಒ ಆತ್ಮ*ಹತ್ಯೆ: ಲೋಕಾ ದಾಳಿಗೆ ಮನನೊಂದು ಸಾವನ್ನಪ್ಪಿದ ಅಧಿಕಾರಿ&lt;/h2&gt;&lt;p&gt;ಇನ್ನೊಂದೆಡೆ ಗದಗ ಜಿಲ್ಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ರೋಣ ಪಟ್ಟಣದ ಬಾಡಿಗೆ ಮನೆಯಲ್ಲಿ ಮಕ್ತುಂ ಹುಸೇನ್ ಕರಡಿಗುಡ್ಡ (46) ಎಂಬವರು ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಮೂಲತಃ ಧಾರವಾಡ ಜಿಲ್ಲೆಯವರಾಗಿದ್ದು, ರೋಣ ತಾಲ್ಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಮ ಪಂಚಾಯಿತಿಗಳ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ತಿಂಗಳಷ್ಟೇ ಕೊತಬಾಳ ಪಂಚಾಯಿತಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದರು.&lt;/p&gt;&lt;p&gt;ಮಕ್ತುಂ ಹುಸೇನ್ ಅವರ ಮೇಲೆ 2022-23ನೇ ಸಾಲಿನಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ನಂತರ ಅವರು ಅಮಾನತ್ತುಗೊಂಡಿದ್ದರು. ಬಳಿಕ ಅವರನ್ನು ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು. ಈ ದಾಳಿ ಮತ್ತು ವರ್ಗಾವಣೆಯ ಪರಿಣಾಮವಾಗಿ ಅವರು ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.&lt;/p&gt;&lt;p&gt;ಮಂಗಳವಾರ ರಾತ್ರಿ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ಪತ್ನಿಯ ಕರೆಗಳಿಗೆ ಸ್ಪಂದಿಸದಿದ್ದ ಹಿನ್ನೆಲೆಯಲ್ಲಿ ಆತಂಕಗೊಂಡ ಪತ್ನಿ, ಮನೆಯ ಮಾಲೀಕರಿಗೆ ಮಾಹಿತಿ ನೀಡಿದರು. ಮಾಲೀಕರು ಮನೆಗೆ ತೆರಳಿ ಪರಿಶೀಲಿಸಿದಾಗ ಆತ್ಮ*ಹತ್ಯೆಯ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.&lt;/p&gt;&lt;p&gt;ಒಂದೆಡೆ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ದಾಳಿ ನಡೆಯುತ್ತಿರುವುದು ಆಡಳಿತ ವ್ಯವಸ್ಥೆಯಲ್ಲಿ ಜವಾಬ್ದಾರಿತನವನ್ನು ತೋರಿಸುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಯೊಬ್ಬ ಆತ್ಮ*ಹತ್ಯೆ ಮಾಡಿಕೊಂಡಿರುವುದು ಮಾನಸಿಕ ಒತ್ತಡ ಮತ್ತು ಸೇವಾ ಪರಿಸ್ಥಿತಿಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಎರಡೂ ಘಟನೆಗಳ ಕುರಿತು ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/village-accountant-caught-red-handed-taking-bribe-by-lokayukta-in-bengaluru-gdp/articleshow-tse66gg"/>
        </item>
        <item>
            <title><![CDATA[ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?]]></title>
            <link>https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd</link>
            <guid isPermaLink="true">https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd</guid>
            <pubDate>Sat, 16 May 2026 14:16:26 +0530</pubDate>
            <description><![CDATA[&lt;p&gt;ಬೆಂಗಳೂರು-ವಿಜಯಪುರ ನಡುವೆ ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ವಿಜಯಪುರ ಜನರಿಗೆ ಸಂತಸ ತಂದಿದೆ. ಆದರೆ, ಈ ರೈಲು ಗದಗ ನಗರವನ್ನು ಪ್ರವೇಶಿಸದ ಕಾರಣ ಅಲ್ಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01krqz254sqjza3j6qkjn1em82,imgname-yeshwanthpur--1--1778920789145.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು-ವಿಜಯಪುರ ನಡುವೆ ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ವಿಜಯಪುರ ಜನರಿಗೆ ಸಂತಸ ತಂದಿದೆ. ಆದರೆ, ಈ ರೈಲು ಗದಗ ನಗರವನ್ನು ಪ್ರವೇಶಿಸದ ಕಾರಣ ಅಲ್ಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.&amp;nbsp;&lt;/p&gt;&lt;img&gt;&lt;p&gt;ಗುಮ್ಮಟ ನಗರಿ ವಿಜಯಪುರ ಜನತೆಯ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದೆ. ಇದೀಗ ಈ ರೈಲಿಗೆ ಗದಗ ಜನತೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಬೈಪಾಸ್ ಮೂಲಕ ರೈಲು ಸಂಚಾರಕ್ಕೆ ಗದಗ ಜನತೆ ಬೇಸರ ವ್ಯಕ್ತಪಡಿಸಿಕೊಂಡು ಬರುತ್ತಿದ್ದಾರೆ. ಈ ಬೇಸರಕ್ಕೆ ಗದಗ ಜನತೆ ತಮ್ಮದೇ ಆದ ಕೆಲವು ಕಾರಣಗಳನ್ನು ನೀಡುತ್ತಾರೆ.&lt;/p&gt;&lt;img&gt;&lt;p&gt;ನಮ್ಮ ಗದಗ ಜನತೆ ಗದಗ ಬೈಪಾಸ್ ರೈಲು ನಿಲ್ದಾಣ ತಲುಪಲು 300 ರೂಪಾಯಿ ಅಟೋ ಚಾರ್ಜ್ ಭರಿಸಬೆಕು , ಗದಗ ಜನೆತೆಗೆ ಅವಕಾಶ ವಂಚನೆ ಮಾಡಿದ ನೈಋತ್ಯ ರೈಲ್ವೆಯ ಅಧಿಕಾರಿಗಳು , ಇದರ ಬಗ್ಗೆ ಶಾಸಕರು ಹಾಗೂ ಸಂಸದರು ಈಗಲಾದರೂ ಗದಗ್ ಜನತೆಯ ಬಗ್ಗೆ ಧ್ವನಿ ಎತ್ತಿ ಗದಗ ಜನತೆಯ ಋಣ ತೀರಿಸಿ ಎಂದು ಆಗ್ರಹಿಸಿದ್ದಾರೆ. ಈ ಟ್ವೀಟ್&zwnj;ನನ್ನು ಸಂಸದರಾ ಬಸವರಾಜ್ ಬೊಮ್ಮಾಯಿ ಮತ್ತು ಸಚಿವ ಹೆಚ್&zwnj;.ಕೆ.ಪಾಟೀಲ್&zwnj; ಅವರಿಗೆ ಟ್ಯಾಗ್ ಮಾಡಲಾಗಿದೆ.&lt;/p&gt;&lt;img&gt;&lt;p&gt;ವೈರಲ್ ಆಗಿರುವ ಪೋಸ್ಟ್&zwnj;ಗೆ ಪ್ರತಿಕ್ರಿಯಿಸಿರುವ ಅಶೋಕ್ ಹಳ್ಳೂರು ಎಂಬವರು, ಸಾಹುಕಾರ್, ಈ ಟ್ರೈನ್ ಗೆ ಬರಬೇಕು ಅಂತ ನಿಮಗ್ಯಾಕೆ ಹಠ? ಬೇರೆ ಟ್ರೈನ್ ಹತ್ತಿ ಬರ್ರೀ, ಹತ್ತು ಹನ್ನೆರಡು ಟ್ರೈನ್ ಇದ್ರೂ ವಿಜಾಪುರ ಗಾಡಿನೇ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಗದಗ ಕಣಗಿನಹಾಳು ನಡುವೆ ಒಂದು ಬೈಪಾಸ್ ರೈಲು ಹಳಿ ಹೊಂಬಾಳ ರೈಲು ನಿಲ್ದಾಣಕ್ಕೆ ಹೊಸದಾಗಿ ನಿರ್ಮಾಣ ಮಾಡಿದ್ರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಆದರೆ ಇವರುಗಳು ಅದನ್ನು ಕೇಳುವುದನ್ನು ಬಿಟ್ಟು ಪ್ರತಿ ಸಾರಿ ಏಕೆ ಗದಗ್ ಬೈಪಾಸ್ ಮೂಲಕ ಟ್ರೈನ್ ಗಳು ಹೋಗುತ್ತದೆ ಎಂದು ಬಡಿದಾಡುತ್ತಾರೆ ಎಂದು ಮತ್ತೋರ್ವ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ.&lt;/p&gt;&lt;img&gt;&lt;p&gt;ಬೆಂಗಳೂರು ಅಥವಾ ಯಶವಂತಪುರ ನಿಲ್ದಾಣದಿಂದ ವಿಜಯಪುರಕ್ಕೆ ಹೊರಡುವ ರೈಲುಗಳು ಗದಗ ಬೈಪಾಸ್ ಮೂಲಕ ಚಲಿಸಿದ್ರೆ ಐದು ಗಂಟೆ ಸಮಯ ಉಳಿತಾಯವಾಗುತ್ತದೆ. ಈ ಮಾರ್ಗದಿಂದ ಚಲಿಸಿದ್ರೆ ಹುಬ್ಬಳ್ಳಿ ಮತ್ತು ಗದಗ ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಿಸುವ ಸಮಯ ಉಳಿತಾಯವಾಗುತ್ತದೆ. ಅನತ್ಯವಾಗಿ ಹುಬ್ಬಳ್ಳಿಗೆ ಹೋಗುವುದು ಸಹ ತಪ್ಪಲಿದೆ.&lt;/p&gt;&lt;img&gt;&lt;p&gt;ಯಶವಂತಪುರ ಜಂಕ್ಷನ್, ತುಮಕೂರು, ಅರಸಿಕೆರೆ ಜಂಕ್ಷನ್, ದಾವಣಗೆರೆ, ಎಸ್&zwnj;ಎಂಎಂ ಹಾವೇರಿ, ಗದಗ ಬೈಪಾಸ್, ಬದಾಮಿ, ಬಾಗಲಕೋಟೆ, ಆಲಮಟ್ಟಿ, ಬಸವನ ಬಾಗೇವಾಡಿ ರೋಡ್ ಮೂಲಕ ವಿಜಯಪುರ ತಲುಪಲಿದೆ.&lt;/p&gt;&lt;p&gt;ನೂತನ ಬೈಪಾಸ್ ರೈಲಿಗೆ ಸಚಿವ ಎಂ.ಬಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿನ ದಿನಗಳಲ್ಲಿ ಕಾಯಂಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇನ್ನು ಗುಳೇದಗುಡ್ಡ ರೋಡ್ ನಿಲ್ದಾಣದಲ್ಲಿಯೂ ನಿಲುಗಡೆ ಕಲ್ಪಿಸಬೇಕು ಎಂಬ ಒತ್ತಾಯವೂ ಸಹ ಕೇಳಿ ಬಂದಿದೆ.&lt;/p&gt;&lt;p&gt;ನಮ್ಮ ಗದಗ ಜನತೆ ಗದಗ ಬೈಪಾಸ್ ರೈಲು ನಿಲ್ದಾಣ ತಲುಪಲು 300 ರೂಪಾಯಿ ಅಟೋ ಚಾರ್ಜ್ ಭರಿಸಬೆಕು , ಗದಗ ಜನೆತೆಗೆ ಅವಕಾಶ ವಂಚನೆ ಮಾಡಿದ @SWRRLY ಅಧಿಕಾರಿಗಳು , ಇದರ ಬಗ್ಗೆ ಶಾಸಕರು ಹಾಗೂ ಸಂಸದರು ಈಗಲಾದರೂ ಗದಗ್ ಜನತೆಯ ಬಗ್ಗೆ ಧ್ವನಿ ಎತ್ತಿ ಗದಗ ಜನತೆಯ ಋಣ ತಿರಿಸಿ @HKPatilINC @BSBommai pic.twitter.com/vDesnjuKcg&lt;/p&gt;&lt;p&gt;&mdash; ಗದಗ ರೈಲು ಬಳಕೆದಾರರು Gadag Railway Users (@GadagRailUsers) May 16, 2026&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/opposition-to-yeshwantpur-gadag-bypass-vijayapura-train-indian-railways-who-will-pay-500-rupees-sir-mrq-tsgz0sd"/>
        </item>
        <item>
            <title><![CDATA[ಲಕ್ಕುಂಡಿಗೆ ಸಂಬಂಧಿಸಿದ ವಿಶೇಷ ಸುದ್ದಿ; ಗ್ರಾಮಸ್ಥರು ತಿಳಿದುಕೊಳ್ಳಲೇಬೇಕಾದ ನ್ಯೂಸ್]]></title>
            <link>https://kannada.asianetnews.com/gallery/karnataka-districts/the-historic-lakkundi-village-of-gadag-district-is-likely-to-be-included-in-the-world-heritage-list-soon-mrq-uaaoyx8</link>
            <guid isPermaLink="true">https://kannada.asianetnews.com/gallery/karnataka-districts/the-historic-lakkundi-village-of-gadag-district-is-likely-to-be-included-in-the-world-heritage-list-soon-mrq-uaaoyx8</guid>
            <pubDate>Sun, 03 May 2026 16:53:26 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಪತ್ತೆಯಾದ ಪುರಾತತ್ವ ವಸ್ತುಗಳು ಮತ್ತು ಗ್ರಾಮಸ್ಥರ ಸಹಕಾರದಿಂದ ಲಕ್ಕುಂಡಿ ರಾಷ್ಟ್ರದ ಗಮನ ಸೆಳೆದಿದ್ದು, ಇದನ್ನು ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kgs17hsvbpx6dx0xh5pzr150,imgname-1-1770366682939.png" type="image/jpeg" height="390" width="690"/>
            <content:encoded><![CDATA[&lt;p&gt;ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಪತ್ತೆಯಾದ ಪುರಾತತ್ವ ವಸ್ತುಗಳು ಮತ್ತು ಗ್ರಾಮಸ್ಥರ ಸಹಕಾರದಿಂದ ಲಕ್ಕುಂಡಿ ರಾಷ್ಟ್ರದ ಗಮನ ಸೆಳೆದಿದ್ದು, ಇದನ್ನು ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ.&lt;/p&gt;&lt;img&gt;&lt;p&gt;ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ ಶೀಘ್ರವೇ ಲಕ್ಕುಂಡಿ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಳ್ಳುವ ಎಲ್ಲ ಸಾಧ್ಯತೆಗಳನ್ನು ಹೊಂದಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.&lt;/p&gt;&lt;p&gt;ತಾಲೂಕಿನ ಲಕ್ಕುಂಡಿಯಲ್ಲಿ ಶನಿವಾರ ನಡೆದ ಪ್ರಾಚ್ಯಾವಶೇಷ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪತ್ತೆಯಾದ ಪುರಾತತ್ವ ವಸ್ತುಗಳು ಮತ್ತು ಬಂಗಾರದ ನಾಣ್ಯಗಳ ಘಟನೆ ಬಳಿಕ ಲಕ್ಕುಂಡಿ ರಾಜ್ಯ ಅಷ್ಟೇ ಅಲ್ಲದೆ ದೇಶದ ಗಮನ ಸೆಳೆದಿದೆ. ಈ ಹಿಂದೆ ಕೇವಲ ಹಾದು ಹೋಗುವ ಸ್ಥಳವೆಂದು ಭಾವಿಸಿದ್ದ ಲಕ್ಕುಂಡಿ, ಈಗ ತನ್ನ ಐತಿಹಾಸಿಕ ಮಹತ್ವವನ್ನು ಜಗತ್ತಿಗೆ ತೋರಿಸುತ್ತಿದೆ ಎಂದು ತಿಳಿಸಿದರು.&lt;/p&gt;&lt;img&gt;&lt;p&gt;ಸಚಿವ ಎಚ್.ಕೆ. ಪಾಟೀಲ ಅವರ ಪ್ರಯತ್ನಗಳಿಂದ ಲಕ್ಕುಂಡಿಯ ಇತಿಹಾಸ ಜನರಿಗೆ ಪರಿಚಿತವಾಗಿದ್ದು, ಈ ಕಾರ್ಯ ಎಲ್ಲರೂ ಹೆಮ್ಮೆ ಪಡುವಂತಹದ್ದು. ಲಕ್ಕುಂಡಿಯ ಶಿಲ್ಪಕಲೆ, ದೇವಾಲಯಗಳು, ಕೆರೆಗಳು ಮತ್ತು ಪ್ರಾಚೀನ ನಿರ್ಮಾಣಗಳು ಅಚ್ಚರಿ ಮೂಡಿಸುವಂತಿವೆ. ಇಂದಿನ ತಂತ್ರಜ್ಞಾನದಲ್ಲಿಯೂ ಸಾಧ್ಯವಿಲ್ಲ ಎನ್ನಿಸುವ ಸೂಕ್ಷ್ಮ ಶಿಲ್ಪಗಳನ್ನು ಆಗಿನ ಕಾಲದಲ್ಲಿ ನಿರ್ಮಿಸಿರುವುದು ಅಚ್ಚರಿಯ ಸಂಗತಿ. ಇದು ನಮ್ಮ ಪೂರ್ವಜರ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. ಲಕ್ಕುಂಡಿಯಂತಹ ಪುರಾತತ್ವ ಸಂಪತ್ತು ಪ್ರದೇಶದ ಅಭಿವೃದ್ಧಿಗೆ ದಾರಿ ತೋರಿಸಬಲ್ಲದು. ಈ ಹಿನ್ನೆಲೆಯಲ್ಲಿ ಲಕ್ಕುಂಡಿಯನ್ನು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಗುರುತಿಸುವ ಕೆಲಸ ನಡೆಯಬೇಕು ಎಂದು ಹೇಳಿದರು&lt;/p&gt;&lt;img&gt;&lt;p&gt;ಗ್ರಾಮಸ್ಥರು ತಮ್ಮ ಬಳಿ ಸಿಗುವ ಪುರಾತತ್ವ ವಸ್ತುಗಳನ್ನು ಸರ್ಕಾರಕ್ಕೆ ಒಪ್ಪಿಸುತ್ತಿರುವುದು ಅಪೂರ್ವ ಉದಾಹರಣೆ. ಇಂತಹ ಹೃದಯ ಶ್ರೀಮಂತಿಕೆ ಎಲ್ಲೆಡೆ ಕಾಣುವುದಿಲ್ಲ. ಲಕ್ಕುಂಡಿಯ ಕೆರೆಗಳು, ದೇವಾಲಯಗಳು ಹಾಗೂ ಪುರಾತತ್ವ ಸ್ಮಾರಕಗಳನ್ನು ಅಭಿವೃದ್ಧಿಪಡಿಸಿ, ದೇಶಕ್ಕೆ ಮಾದರಿಯಾದ ಪುರಾತತ್ವ ಕೇಂದ್ರವನ್ನಾಗಿ ರೂಪಿಸಬೇಕು ಎಂದು ಹೇಳಿದರು.&lt;/p&gt;&lt;img&gt;&lt;p&gt;ನಾನು, ಎಚ್&zwnj;.ಕೆ. ಪಾಟೀಲರು ಒಮ್ಮೇಲೆ ರಾಜಕೀಯಕ್ಕೆ ಬಂದವರು. ಆದರೆ, ಬೇರೆ ಬೇರೆ ಪಕ್ಷಗಳಿಂದ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗಲೆಲ್ಲ ನಾವಿಬ್ಬರೂ ಒಟ್ಟಾಗಿ ಹೋರಾಟ ಮಾಡಿದ್ದೇವೆ. ಅದಕ್ಕೆ ಕೆಲವರು ಇವರದ್ದು ಮಿಲಾಪಿ ರಾಜಕೀಯ ಎಂದು ಟೀಕಿಸಿದ್ದಾರೆ. ಆದರೆ. ನಮ್ಮ ಮಿಲಾಪಿ ಇದ್ದದ್ದು ಕೇವಲ ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಾತ್ರ. ಚುನಾವಣೆ ಬಂದಾಗ ನಾವೇ ಬೇರೆ, ಅವರೇ ಬೇರೆ ಎಂದು ತಮ್ಮ ಮತ್ತು ಎಚ್.ಕೆ. ಪಾಟೀಲ ರಾಜಕೀಯ ಒಡನಾಟ ಮತ್ತು ಹೋರಾಟ ಮನೋಭಾವನೆಯನ್ನು ಬಸವರಾಜ ಹೊರಟ್ಟಿ ಸ್ಮರಿಸಿಕೊಂಡರು.&lt;/p&gt;&lt;img&gt;&lt;p&gt;ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಲಕ್ಕುಂಡಿ ಗ್ರಾಮದ ಜನರು ಉತ್ಖನನ ಸೇರಿದಂತೆ ಪುರಾತತ್ವ ಇಲಾಖೆ ನಡೆಸುತ್ತಿರುವ ಪ್ರತಿಯೊಂದು ಕಾರ್ಯಕ್ಕೂ ನೀಡುತ್ತಿರುವ ಸಹಕಾರ, ಸ್ಪಂದನೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಶ್ಲಾಘಿಸಿದರು. ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶನಿವಾರ ನಡೆದ ಪ್ರಾಚ್ಯಾವಶೇಷ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.&lt;/p&gt;&lt;img&gt;&lt;p&gt;ಎರಡು ಸಾವಿರ ವರ್ಷಗಳ ಹಿಂದಿನ ಇತಿಹಾಸವನ್ನು ಹೊಂದಿರುವ ಲಕ್ಕುಂಡಿಯ ಪುರಾತತ್ವ ಸಂಪತ್ತು ಇಂದಿನ ಪೀಳಿಗೆಗೆ ಅಚ್ಚರಿಯ ವಿಷಯವಾಗಿದೆ. ಆ ಕಾಲದ ಶಿಲ್ಪಿಗಳ ಪ್ರತಿಭೆ, ಶ್ರಮ ಮತ್ತು ಕಲಾತ್ಮಕತೆ ಎಷ್ಟು ಉನ್ನತ ಮಟ್ಟದಲ್ಲಿತ್ತು ಎಂಬುದಕ್ಕೆ ಇಲ್ಲಿ ದೊರೆಯುತ್ತಿರುವ ವಸ್ತುಗಳೇ ಸಾಕ್ಷಿಯಾಗಿವೆ. ಅವುಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಸರ್ಕಾರಕ್ಕೆ ನೀಡುತ್ತಿರುವುದು ಗ್ರಾಮಸ್ಥರ ಬಹು ದೊಡ್ಡ ಗುಣವಾಗಿದೆ ಎಂದರು.&lt;/p&gt;&lt;img&gt;&lt;p&gt;ಇದು ಇಂದು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಇದೇ ರೀತಿ ಗ್ರಾಮಸ್ಥರು ಸಹಕಾರ ನೀಡಿದಲ್ಲಿ ಲಕ್ಕುಂಡಿ ಗ್ರಾಮ ಯುನೆಸ್ಕೋ ಪಟ್ಟಿಗೆ ಸೇರಲಿದೆ. ಹಂಪಿಯಂತೆ ಲಕ್ಕುಂಡಿಯೂ ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಕೈ ಬೇಸಿ ಕರೆಯಲಿದೆ. ಲಕ್ಕುಂಡಿ ಅಭಿವೃದ್ಧಿ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತೆಗೆದುಕೊಳ್ಳುತ್ತಿರುವ ಕ್ರಮ ಕೂಡಾ ಶ್ಲಾಘನೀಯ. ಕ್ಷೇತ್ರದ ಶಾಸಕನಾಗಿ ಇದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/the-historic-lakkundi-village-of-gadag-district-is-likely-to-be-included-in-the-world-heritage-list-soon-mrq-uaaoyx8"/>
        </item>
        <item>
            <title><![CDATA[ಗದಗ ಪಿಡಿಒ ಆತ್ಮಹ*ತ್ಯೆ: ಲೋಕಾಯುಕ್ತ ದಾಳಿ, ವಿಚಾರಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಕ್ತುಂಹುಸೇನ!]]></title>
            <link>https://kannada.asianetnews.com/karnataka-districts/gadag-ron-pdo-maktumhusain-karadigudda-self-death-lokayukta-raid-mental-stress-sat/articleshow-umo6q0q</link>
            <guid isPermaLink="true">https://kannada.asianetnews.com/karnataka-districts/gadag-ron-pdo-maktumhusain-karadigudda-self-death-lokayukta-raid-mental-stress-sat/articleshow-umo6q0q</guid>
            <pubDate>Thu, 30 Apr 2026 19:19:19 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ರೋಣದಲ್ಲಿ, ಲೋಕಾಯುಕ್ತ ದಾಳಿಯಿಂದ ಉಂಟಾದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಕ್ತುಂಹುಸೇನ ಕರಡಿಗುಡ್ಡ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ದಾಳಿ, ಅಮಾನತು ಮತ್ತು ವರ್ಗಾವಣೆಯಿಂದ ಖಿನ್ನತೆಗೆ ಒಳಗಾಗಿದ್ದರು. ಇದೀಗ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kqfackmtwsccxft3t082vdzr,imgname-gadag-pdo-death-1777556934295.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಏ.30): ಜಿ&lt;/strong&gt;ಲ್ಲೆಯ ರೋಣ ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಲೋಕಾಯುಕ್ತ ದಾಳಿಯ ಬಳಿಕ ಉಂಟಾದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು (PDO) ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ರೋಣ ತಾಲೂಕಿನ ಅಸೂಟಿ ಹಾಗೂ ಕೊತಬಾಳ ಗ್ರಾಮದ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಕ್ತುಂಹುಸೇನ ಕರಡಿಗುಡ್ಡ (46) ಅವರು ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಿದ ದುರ್ದೈವಿ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಮೂಲತಃ ಧಾರವಾಡ ಜಿಲ್ಲೆಯವರಾದ ಮಕ್ತುಂಹುಸೇನ ಕರಡಿಗುಡ್ಡ ಅವರು ರೋಣ ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಕಳೆದ ಮಂಗಳವಾರ ರಾತ್ರಿ ಇವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸತತ ಎರಡು ದಿನಗಳಿಂದ ಇವರು ಪತ್ನಿಯ ಕರೆಗೆ ಸ್ಪಂದಿಸಿರಲಿಲ್ಲ. ಪತಿ ಫೋನ್ ಸ್ವೀಕರಿಸದ ಕಾರಣ ಗಾಬರಿಗೊಂಡ ಪತ್ನಿ, ಬಾಡಿಗೆ ಮನೆಯ ಮಾಲೀಕರಿಗೆ ಕರೆ ಮಾಡಿ ವಿಚಾರಿಸುವಂತೆ ವಿನಂತಿಸಿದ್ದಾರೆ. ಮನೆಯ ಮಾಲೀಕರು ಹೋಗಿ ನೋಡಿದಾಗ ಸಾವಿನ ಕರುಣಾಜನಕ ದೃಶ್ಯ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಆತ್ಮ*ಹತ್ಯೆಗೆ ಕಾರಣವೇನು?&lt;/strong&gt;&lt;/h2&gt;&lt;p&gt;ಪಿಡಿಒ ಮಕ್ತುಂಹುಸೇನ ಅವರ ಜೀವನದಲ್ಲಿ ಕಳೆದ 2 ವರ್ಷಗಳಿಂದ ನೆಮ್ಮದಿ ಇರಲಿಲ್ಲ ಎನ್ನಲಾಗಿದೆ. 2022-23ನೇ ಸಾಲಿನಲ್ಲಿ ಇವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ನಂತರ ಇಲಾಖೆಯು ಇವರನ್ನು ಅಮಾನತುಗೊಳಿಸಿತ್ತು. ದೀರ್ಘಕಾಲದ ಅಮಾನತ್ತಿನ ಬಳಿಕ ಇವರನ್ನು ಗದಗ ಜಿಲ್ಲೆಗೆ ನಿಯೋಜನೆ ಮಾಡಲಾಗಿತ್ತು. ಕಳೆದ ತಿಂಗಳಷ್ಟೇ ಇವರು ಕೊತಬಾಳ ಪಂಚಾಯತಿಯ ಪಿಡಿಒ ಆಗಿ ಅಧಿಕಾರ ವಹಿಸಿಕೊಂಡಿದ್ದರು.&lt;/p&gt;&lt;p&gt;ಲೋಕಾಯುಕ್ತ ದಾಳಿ, ಕೆಲಸದಿಂದ ಅಮಾನತುಗೊಂಡಿದ್ದು ಹಾಗೂ ನಂತರದ ವರ್ಗಾವಣೆಯ ಪ್ರಕ್ರಿಯೆಗಳು ಇವರನ್ನು ಮಾನಸಿಕವಾಗಿ ಜರ್ಜರಿತಗೊಳಿಸಿದ್ದವು ಎಂದು ಹೇಳಲಾಗುತ್ತಿದೆ. ಸಮಾಜದಲ್ಲಿ ಗೌರವ ಕಳೆದುಕೊಂಡೆ ಎಂಬ ಕೊರಗು ಹಾಗೂ ಇಲಾಖಾ ತನಿಖೆಗಳ ಭೀತಿಯಿಂದ ಮಕ್ತುಂಹುಸೇನ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಈ ಮಾನಸಿಕ ಕುಸಿತವೇ ಅವರು ಇಂತಹದೊಂದು ತೀವ್ರ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.&lt;/p&gt;&lt;h3&gt;&lt;strong&gt;ಸ್ಥಳಕ್ಕೆ ಪೊಲೀಸರ ಭೇಟಿ:&lt;/strong&gt;&lt;/h3&gt;&lt;p&gt;ಘಟನೆ ತಿಳಿದ ತಕ್ಷಣ ರೋಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಲೋಕಾಯುಕ್ತ ದಾಳಿಯಿಂದ ಆರಂಭವಾದ ಕಾನೂನು ಹೋರಾಟ ಮತ್ತು ಮಾನಸಿಕ ಸಂಘರ್ಷವು ಅಂತಿಮವಾಗಿ ಅಧಿಕಾರಿಯೊಬ್ಬರ ಸಾವಿನಲ್ಲಿ ಅಂತ್ಯಗೊಂಡಿರುವುದು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿಷಾದ ಮೂಡಿಸಿದೆ.&lt;/p&gt;&lt;p&gt;ಬದುಕು ಕಟ್ಟಿಕೊಳ್ಳಬೇಕಾದ ಅಧಿಕಾರಿಯೊಬ್ಬರು ಆತುರದ ನಿರ್ಧಾರಕ್ಕೆ ಬಲಿಯಾಗಿರುವುದು ಅವರ ಕುಟುಂಬವನ್ನು ಅನಾಥವಾಗಿಸಿದೆ. ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೇಲಿರುವ ಕೆಲಸದ ಒತ್ತಡ ಮತ್ತು ಭ್ರಷ್ಟಾಚಾರದ ಆರೋಪಗಳು ಎದುರಾದಾಗ ಅವರು ಅನುಭವಿಸುವ ಮಾನಸಿಕ ಹಿಂಸೆಯತ್ತ ಬೆಳಕು ಚೆಲ್ಲಿದೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/gadag-ron-pdo-maktumhusain-karadigudda-self-death-lokayukta-raid-mental-stress-sat/articleshow-umo6q0q"/>
        </item>
        <item>
            <title><![CDATA[ಕರಾವಳಿ, ಮಲೆನಾಡನ್ನೂ ಮೀರಿಸಿದ ಗದಗ ಮಳೆ ಅಬ್ಬರ: ಭಾನುವಾರ ಜಿಲ್ಲಾವಾರು ಎಷ್ಟು ಮಳೆಯಾಗಿದೆ ವಿವರ ನೋಡಿ!]]></title>
            <link>https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha</link>
            <guid isPermaLink="true">https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha</guid>
            <pubDate>Mon, 18 May 2026 13:25:38 +0530</pubDate>
            <description><![CDATA[ಕಳೆದ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಉತ್ತಮ ಮಳೆಯಾಗಿದ್ದು, ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ 82.4 ಮಿಮೀ ದಾಖಲೆ ಮಳೆಯಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲೂ ವರುಣನ ಸಿಂಚನವಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6wag915g31p9ppzq2qzgx,imgname-screenshot-2026-05-17-195924-1779029649929.png" type="image/jpeg" height="390" width="690"/>
            <content:encoded><![CDATA[ಕಳೆದ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಉತ್ತಮ ಮಳೆಯಾಗಿದ್ದು, ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ 82.4 ಮಿಮೀ ದಾಖಲೆ ಮಳೆಯಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲೂ ವರುಣನ ಸಿಂಚನವಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.&lt;img&gt;&lt;p&gt;&lt;strong&gt;ಬೆಂಗಳೂರು (ಮೇ 18): ರಾ&lt;/strong&gt;ಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣ ದೇವ ತಂಪೆರೆದಿದ್ದಾನೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ಬೆಂಗಳೂರು ಹವಾಮಾನ ಕೇಂದ್ರ (IMD) ಮಾಹಿತಿ ನೀಡಿದೆ. ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.&lt;/p&gt;&lt;img&gt;&lt;p&gt;ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ಉತ್ತರ ಒಳನಾಡಿನ ಗದಗ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಗದಗ ವೀಕ್ಷಣಾಲಯದಲ್ಲಿ ಬರೊಬ್ಬರಿ 82.4 ಮಿಮೀ ಮಳೆ ದಾಖಲಾಗಿದ್ದರೆ, ಜಿಲ್ಲೆಯ ಹುಲಿಕೋಟೆ ಕೆವಿಕೆ ಕೇಂದ್ರದಲ್ಲಿ 18.0 ಮಿಮೀ ಮಳೆಯಾಗಿದೆ. ಗುಡುಗು ಮತ್ತು ಮಿಂಚಿನ ಸಹಿತ ಸುರಿದ ಈ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.&lt;/p&gt;&lt;p&gt;ಉತ್ತರ ಒಳನಾಡಿನ ಧಾರವಾಡದಲ್ಲಿ 20.0 ಮಿಮೀ&lt;/p&gt;&lt;p&gt;ಕೊಪ್ಪಳದ ಯಲಬುರ್ಗಾದಲ್ಲಿ 19.0 ಮಿಮೀ ಮಳೆಯಾಗುವ ಮೂಲಕ ವರುಣನ ಅಬ್ಬರ ಕಂಡುಬಂದಿದೆ.&lt;/p&gt;&lt;img&gt;&lt;p&gt;ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳೂರು ವಿಮಾನ ನಿಲ್ದಾಣದ ಬಳಿ 13.8 ಮಿಮೀ ಮಳೆಯಾಗಿದೆ.&amp;nbsp;&lt;/p&gt;&lt;p&gt;ಮಲೆನಾಡು ಭಾಗದ ಶಿವಮೊಗ್ಗದ ನವುಲೆಯಲ್ಲಿ 19.5 ಮಿಮೀ ಹಾಗೂ ಇರುವಾಕಿಯಲ್ಲಿ 19.5 ಮಿಮೀ ಮಳೆಯಾಗಿದೆ.&amp;nbsp;&lt;/p&gt;&lt;p&gt;ಚಿಕ್ಕಮಗಳೂರಿನ ಮುಡಿಗೆರೆಯಲ್ಲಿ 3.0 ಮಿಮೀ ಮತ್ತು ಬಾಳೆಹೊನ್ನೂರಿನಲ್ಲಿ ಸಾಧಾರಣ ಮಳೆಯಾಗಿದೆ.&amp;nbsp;&lt;/p&gt;&lt;p&gt;ಶಿರಸಿಯಲ್ಲಿ 10.5 ಮಿಮೀ ಮಳೆಯಾಗುವ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆರಾಯ ತಂಪೆರೆದಿದ್ದಾನೆ.&lt;/p&gt;&lt;img&gt;&lt;p&gt;ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೇಳಿಕೊಳ್ಳುವಂತಹ ಭಾರಿ ಮಳೆಯಾಗದಿದ್ದರೂ, ಎಚ್&zwnj;ಎಎಲ್ (HAL) ವಿಮಾನ ನಿಲ್ದಾಣದ ಸುತ್ತಮುತ್ತ 1.4 ಮಿಮೀ ಸಾಧಾರಣ ಮಳೆಯಾಗಿದೆ. ನಗರದ ಹಲವೆಡೆ ಕ್ಯುಮುಲೋನಿಂಬಸ್ (CB) ಮೋಡಗಳು ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.&lt;/p&gt;&lt;img&gt;&lt;p&gt;ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ (TSRA) ಸಂಭವಿಸಿದ್ದು, ಹವಾಮಾನ ಕೇಂದ್ರದ ರೇಡಾರ್&zwnj;ಗಳಲ್ಲಿ ಕ್ಯುಮುಲೋನಿಂಬಸ್ ಮೋಡಗಳ ತೀವ್ರತೆ ಕಂಡುಬಂದಿದೆ. ಕಲಬುರಗಿ, ಬೆಳಗಾವಿ, ಚಿತ್ರದುರ್ಗ ಮತ್ತು ವಿದ್ಯಾ ನಗರದ ಭಾಗಗಳಲ್ಲಿ ಮೋಡಗಳು ಕವಿದಿದ್ದು, ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ. ರೈತರಿಗೆ ಈ ಮಳೆ ಮಿಶ್ರಫಲ ನೀಡಿದ್ದು, ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಕೃಷಿಕರಲ್ಲಿ ಹರ್ಷ ಮೂಡಿಸಿದೆ. ಆದರೆ ಅಕಾಲಿಕ ಗುಡುಗು ಮಿಂಚಿನ ಬಗ್ಗೆ ಜನರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/karnataka-weather-update-heavy-rain-in-gadag-dharwad-mangalore-imd-report-sat-xfa43ha"/>
        </item>
        <item>
            <title><![CDATA[ಪ್ರಧಾನಿ ಮೋದಿ ಹೇಳಿಕೆ ಜನರಲ್ಲಿ ಭಯ ಹುಟ್ಟಿಸುತ್ತಿದೆ: ಸಚಿವ ಎಚ್.ಕೆ.ಪಾಟೀಲ ವಾಗ್ದಾಳಿ]]></title>
            <link>https://kannada.asianetnews.com/karnataka-districts/minister-hk-patil-slams-pm-modi-statement-gadag-gvd/articleshow-xtr13ly</link>
            <guid isPermaLink="true">https://kannada.asianetnews.com/karnataka-districts/minister-hk-patil-slams-pm-modi-statement-gadag-gvd/articleshow-xtr13ly</guid>
            <pubDate>Tue, 12 May 2026 22:25:58 +0530</pubDate>
            <description><![CDATA[&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸಾರ್ವಜನಿಕ ಸಂದೇಶ ಜನರಲ್ಲಿ ಭಯ ಮೂಡಿಸುವಂತಿದೆ. ಅವರ ರಾಜಕೀಯ ಮಾತುಗಳು ತೀವ್ರ ಖಂಡನಾರ್ಹ ಎಂದು ಸಚಿವ ಎಚ್.ಕೆ.ಪಾಟೀಲ ತೀವ್ರ ಆತಂಕ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k2bahth6a7x7gcxndwa4d97g,imgname-ngn-1754874309158.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಮೇ.12): &lt;/strong&gt;ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸಾರ್ವಜನಿಕ ಸಂದೇಶ ಜನರಲ್ಲಿ ಭಯ ಮೂಡಿಸುವಂತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತೀವ್ರ ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ನೀಡಿದ ಸಂದೇಶದಿಂದ ದೇಶ ಗಂಭೀರ ಸನ್ನಿವೇಶವನ್ನು ಎದುರಿಸುತ್ತಿದೆಯೆಂಬ ಭಾವನೆ ಮೂಡುತ್ತಿದೆ. ಆದರೆ, ಈ ಸಂದೇಶದ ಹಿನ್ನೆಲೆ ಮತ್ತು ಉದ್ದೇಶ ಏನು ಎಂಬುದು ಸ್ಪಷ್ಟವಾಗಿಲ್ಲ. ಪಾರ್ಲಿಮೆಂಟ್&zwnj;ನಲ್ಲಿ ಈ ವಿಷಯ ಚರ್ಚೆಯಾಗಬೇಕಿತ್ತು ಎಂದರು.&lt;/p&gt;&lt;p&gt;ಪ್ರಧಾನಿ ವಿದೇಶ ಪ್ರಯಾಣ ತಪ್ಪಿಸಲು, ಇಂಧನ ಬಳಕೆ ಕಡಿಮೆ ಮಾಡಲು ಕರೆ ನೀಡಿರುವುದರ ಹಿಂದೆ ಏನಿದೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಫ್ಲೈಟ್&zwnj; ಹಾರಾಟ ಕಡಿಮೆ ಮಾಡಬೇಕೆ, ಕೊರೋನಾ ಕಾಲದಂತೆ ವರ್ಚುವಲ್&zwnj; ಸಭೆಗಳು ನಡೆಸಬೇಕೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರವೇ ನಿಯಮಾವಳಿ ರೂಪಿಸಬೇಕು. ಸಾರ್ವಜನಿಕರಿಗೆ ನೀಡಿದ ಸಂದೇಶಕ್ಕೆ ಅನುಗುಣವಾಗಿ ಸ್ಪಷ್ಟ ಮಾರ್ಗಸೂಚಿ ಇರಬೇಕು ಎಂದು ಒತ್ತಾಯಿಸಿದರು.&lt;/p&gt;&lt;p&gt;ದೇಶದಲ್ಲಿ ಯಾವ ರೀತಿಯ ಪರಿಸ್ಥಿತಿ ಉಂಟಾಗಿದೆ ಎಂಬುದನ್ನು ಪ್ರಧಾನಿಯವರು ಜನತೆಗೆ ಸಂಪೂರ್ಣವಾಗಿ ವಿವರಿಸಬೇಕು. ಇಲ್ಲವಾದರೆ ಜನರಲ್ಲಿ ಗೊಂದಲ ಮತ್ತು ಭಯ ಉಂಟಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರಾನ್, ಇರಾಕ್, ಅಮೆರಿಕ ದೇಶಗಳ ನಡುವೆ ಏನಾದರೂ ಅಸಹಕಾರ ಉಂಟಾಗಿದೆಯೇ ಎಂಬುದರ ಕುರಿತು ಕೂಡ ಸ್ಪಷ್ಟತೆ ನೀಡಬೇಕೆಂದರು. ರಾಜ್ಯದ ಅಭಿವೃದ್ಧಿ ಹಾಗೂ ಉದ್ಯೋಗದ ವಿಷಯದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;p&gt;ವಿಬಿ ಜಿ ರಾಮ್&zwnj; ಜಿ ಯೋಜನೆ ಇನ್ನೂ ನೋಟಿಫೈ ಆಗಿಲ್ಲ. ಅದಕ್ಕಾಗಿ ಹಣ ಬಿಡುಗಡೆ ಆಗುತ್ತಿಲ್ಲ. ಜನರು ಕೂಲಿ ಕೆಲಸ ಕೇಳುತ್ತಿದ್ದಾರೆ. ಆದರೆ ಯಾವ ಕೆಲಸ ಕೊಡಬೇಕು ಎಂಬ ಸ್ಪಷ್ಟತೆ ಇಲ್ಲ ಎಂದರು. ನರೇಗಾ ಕುರಿತು ಮಾತನಾಡಿದ ಅವರು, ಈ ಯೋಜನೆಯನ್ನು ಮುಚ್ಚಿಹಾಕಿದಂತಾಗಿದೆ. ಮುಂದಿನ ಪರಿಹಾರ ಏನು ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದರು. ಒಟ್ಟಾರೆ, ದೇಶ ಎದುರಿಸುತ್ತಿರುವ ಸನ್ನಿವೇಶದ ಬಗ್ಗೆ ಕೇಂದ್ರ ಸರ್ಕಾರ ತಕ್ಷಣ ಸಮಗ್ರ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.&lt;/p&gt;&lt;h2&gt;&lt;strong&gt;ಪ್ರಧಾನಿ ಮೋದಿ ಹೇಳಿಕೆ ಖಂಡನಾರ್ಹ&lt;/strong&gt;&lt;/h2&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಹುಡುಗಾಟದ ಮಾತುಗಳು ತೀವ್ರ ಖಂಡನಾರ್ಹ ಎಂದು ಆಕ್ಷೇಪಿಸಿದರು. ಧಾರ್ಮಿಕ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದ ಪ್ರಧಾನಿ, ಮತ್ತೊಂದು ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮಾತನಾಡುವುದು ಸರಿಯಲ್ಲ. ಅಂತಹ ವಿಷಯಗಳಲ್ಲಿ ಆಸಕ್ತಿ ತೋರಿಸುವುದು ಪ್ರಧಾನಿಗೆ ತಕ್ಕದ್ದು ಅಲ್ಲ, ವಿಜಯೇಂದ್ರ ಮಾತನಾಡಬೇಕಾದ ವಿಷಯವನ್ನು ದೇಶದ ಪ್ರಧಾನಿ ಮಾತನಾಡುತ್ತಿರುವುದು, ಅವರು ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.&lt;/p&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಪ್ರಧಾನಿ ಉಲ್ಲೇಖ ಮಾಡಿದ ಹಿನ್ನೆಲೆ ಪ್ರಶ್ನಿಸಿದ ಅವರು, ಸಿದ್ದರಾಮಯ್ಯನವರ ಬಗ್ಗೆ ನಿಮಗೆ ಅಷ್ಟೊಂದು ಗಾಬರಿ ಯಾಕೆ? ಈ ವಿಷಯ ನಿಮಗ್ಯಾಕೆ? ನಮ್ಮ ಪಕ್ಷದ ನಾಯಕರು ಅಥವಾ ಶಾಸಕರು ಬದಲಾವಣೆ ಮಾಡ್ತೇವೆ ಎಂದು ಯಾರಾದರೂ ನಿಮಗೆ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/minister-hk-patil-slams-pm-modi-statement-gadag-gvd/articleshow-xtr13ly"/>
        </item>
        <item>
            <title><![CDATA[ಗದಗ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅವಘಡ; ತುಂಡಾದ 'ಡ್ಯಾನ್ಸಿಂಗ್ ಫ್ಲೈ' ತೊಟ್ಟಿಲು]]></title>
            <link>https://kannada.asianetnews.com/gallery/karnataka-districts/accident-at-gadag-tontadarya-mutt-fair-amusement-gaming-dancing-fly-cradle-broken-8-injured-mrq-xwthvfb</link>
            <guid isPermaLink="true">https://kannada.asianetnews.com/gallery/karnataka-districts/accident-at-gadag-tontadarya-mutt-fair-amusement-gaming-dancing-fly-cradle-broken-8-injured-mrq-xwthvfb</guid>
            <pubDate>Sun, 03 May 2026 22:16:11 +0530</pubDate>
            <description><![CDATA[ಗದಗ ನಗರದ ತೋಂಟದಾರ್ಯ ಮಠದ ಜಾತ್ರೆಯಲ್ಲಿ 'ಡ್ಯಾನ್ಸಿಂಗ್ ಫ್ಲೈ' ತೊಟ್ಟಿಲು ಮುರಿದುಬಿದ್ದ ಪರಿಣಾಮ ಎಂಟು ಜನರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದ್ದು, ಈ ಘಟನೆಯು ಜಾತ್ರೆಯಲ್ಲಿ ಆತಂಕ ಸೃಷ್ಟಿಸಿ, ಅಸುರಕ್ಷಿತ ಆಟಿಕೆಗಳ ಬಳಕೆಯ ವಿರುದ್ಧ ಪ್ರತಿಭಟನೆಗೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqqbcheg345b15nvxxde1h41,imgname-gadag-tontadarya-mata--3--1777826416080.jpg" type="image/jpeg" height="390" width="690"/>
            <content:encoded><![CDATA[ಗದಗ ನಗರದ ತೋಂಟದಾರ್ಯ ಮಠದ ಜಾತ್ರೆಯಲ್ಲಿ 'ಡ್ಯಾನ್ಸಿಂಗ್ ಫ್ಲೈ' ತೊಟ್ಟಿಲು ಮುರಿದುಬಿದ್ದ ಪರಿಣಾಮ ಎಂಟು ಜನರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದ್ದು, ಈ ಘಟನೆಯು ಜಾತ್ರೆಯಲ್ಲಿ ಆತಂಕ ಸೃಷ್ಟಿಸಿ, ಅಸುರಕ್ಷಿತ ಆಟಿಕೆಗಳ ಬಳಕೆಯ ವಿರುದ್ಧ ಪ್ರತಿಭಟನೆಗೆ ಕಾರಣವಾಗಿದೆ.&lt;img&gt;&lt;p&gt;ಗದಗ ನಗರ ತೋಂಟದಾರ್ಯ ಮಠದ ಅಂಗಳದಲ್ಲಿ ಅವಘಡ ಸಂಭವಿಸಿದೆ. ಜಾತ್ರೆಯಲ್ಲಿನ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲು ಕಟ್ ಆಗಿದ್ದು, ಎಂಟು ಜನರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಜಾತ್ರೆಗೆ ಆಗಮಿಸಿದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;img&gt;&lt;p&gt;ಗದಗ ನಗರದ ತೋಂಟದಾರ್ಯ ಮಠದ ಅಂಗಳದಲ್ಲಿ ಜಾತ್ರಾಮಹೋತ್ಸವ ಅಂಗವಾಗಿ ಮಕ್ಕಳಿಗಾಗಿ ಆಟದ ವ್ಯವಸ್ಥೆ ಮಾಡಲಾಗಿತ್ತು. ಡ್ಯಾನ್ಸಿಂಗ್ ಫ್ಲೈ ಹೆಸರಿನ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. ಈ ತೊಟ್ಟಿಲು ಯಂತ್ರದ ಮೂಲಕ ಚಾಲನೆಯಾಗುತ್ತಿತ್ತು. ತಾಂತ್ರಿಕ ದೋಷದಿಂದ ತೊಟ್ಟಿಲು ಕಟ್ ಆಗಿದೆ ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಈ ಅವಘಡದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಬೆನ್ನಲ್ಲೇ ಹಿಂದು ವೀರಶೈವ ಲಿಂಗಾಯತ ಯುವ ವೇದಿಕೆಯ ಸದಸ್ಯರು ಪ್ರತಿಭಟನೆ ನಡೆಸಿ,ಜಾತ್ರೆಯಲ್ಲಿ ಅಸುರಕ್ಷಿತ ಆಟಿಕೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು. ಹಾಗೆಯೇ ಕೂಡಲೇ ಜಾತ್ರೆ ಬಂದ್ ಮಾಡುವಂತೆ ಆಗ್ರಹಿಸಿದರು.&lt;/p&gt;&lt;img&gt;&lt;p&gt;ಬಲವಂತವಾಗಿ ಜಾತ್ರೆಯಲ್ಲಿನ ಅಂಗಡಿಗಳನ್ನು ಬಂದ್ ಮಾಡಿಸಲು ಹಿಂದು ವೀರಶೈವ ಲಿಂಗಾಯತ ಯುವ ವೇದಿಕೆಯ ಸದಸ್ಯರು ಮುಂದಾಗಿದ್ದಾರೆ. ಹಾಗೆಯೇ ತೋಂಟದಾರ್ಯ ಮಠದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/accident-at-gadag-tontadarya-mutt-fair-amusement-gaming-dancing-fly-cradle-broken-8-injured-mrq-xwthvfb"/>
        </item>
        <item>
            <title><![CDATA[ಗಜೇಂದ್ರಗಡದಲ್ಲಿ 'ಥರ್ಡ್ ಐ' ತಪ್ಪಿಸಲು ವಾಹನ ಸವಾರರ ವಾಮಮಾರ್ಗ! ಸಫಲವಾಗದ ಸುಗಮ ಸಂಚಾರ]]></title>
            <link>https://kannada.asianetnews.com/karnataka-districts/motorists-turn-left-to-avoid-the-third-eye-traffic-police-cctv-camera-in-gajendragadh-gadag-mrq/articleshow-xxon7r5</link>
            <guid isPermaLink="true">https://kannada.asianetnews.com/karnataka-districts/motorists-turn-left-to-avoid-the-third-eye-traffic-police-cctv-camera-in-gajendragadh-gadag-mrq/articleshow-xxon7r5</guid>
            <pubDate>Sun, 19 Apr 2026 15:21:00 +0530</pubDate>
            <description><![CDATA[&lt;p&gt;ಗಜೇಂದ್ರಗಡದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಥರ್ಡ್ ಐ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳಲು, ಕೆಲ ವಾಹನ ಸವಾರರು ತಮ್ಮ ನೋಂದಣಿ ಸಂಖ್ಯೆಯನ್ನು ಮರೆಮಾಚುತ್ತಿದ್ದಾರೆ ಅಥವಾ ನಂಬರ್ ಪ್ಲೇಟ್&zwnj;ಗಳನ್ನೇ ತೆಗೆದುಹಾಕುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kpjhyhbvggp086zst68mfdmy,imgname-gajendragadh-1776591783290.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಎಂ. ಸೈಯದ್&amp;nbsp;&lt;/strong&gt;&lt;/p&gt;&lt;p&gt;&lt;strong&gt;ಗಜೇಂದ್ರಗಡ: &lt;/strong&gt;ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಥರ್ಡ್ ಐ ಜಾರಿಗೆ ತಂದಿದ್ದು, ಪಟ್ಟಣದಲ್ಲಿ ಥರ್ಡ್ ಐ ಕಣ್ಣಿಗೆ ಮಸಿ ರಾಚಲು ಕೆಲವರು ವಾಹನದ ನೋಂದಣಿ ಸಂಖ್ಯೆ ಮರೆಮಾಚಿದರೆ ಇನ್ನೂ ಕೆಲವರು ಬೈಕ್&zwnj;ಗಳ ಹಿಂಬದಿಯ ನಂಬರ್ ಪ್ಲೇಟ್ ತೆಗೆಯುತ್ತಿದ್ದು, ಅಪಘಾತ ಅಥವಾ ಅವಘಡ ವೇಳೆ ವಾಹನ ನೋಂದಣಿ ಸಂಖ್ಯೆ ಪತ್ತೆ ಹೇಗೆ ಎಂಬ ಪ್ರಶ್ನೆಗಳನ್ನು ನಾಗರಿಕರು ಪ್ರಶ್ನಿಸುತ್ತಿದ್ದಾರೆ.&lt;/p&gt;&lt;p&gt;ಜಿಲ್ಲೆಯ ದೊಡ್ಡ ಪಟ್ಟಣವಾಗಿರುವ ಪಟ್ಟಣಕ್ಕೆ ಪ್ರತಿದಿನ ನೆರೆಯ ತಾಲೂಕಿನ ಅನೇಕ ಗ್ರಾಮಗಳ ನೂರಾರು ವಾಹನಗಳು ಸ್ಥಳೀಯ ರಸ್ತೆ ಸೇರಿ ಪ್ರಮುಖ ವೃತ್ತಗಳಲ್ಲಿ ಸಂಚಾರ ಮಾಡುತ್ತವೆ. ಆದರೆ ಸರಾಸರಿ ಹತ್ತು ವಾಹನಗಳಲ್ಲಿ 1 ವಾಹನದ ನೋಂದಣಿ ಸಂಖ್ಯೆ ಮರೆಮಾಚಿದ್ದು ಹಾಗೂ ಮತ್ತೊಂದು ಬೈಕ್ ನಂಬರ್ ಪ್ಲೇಟ್ ಇಲ್ಲದಿರುವುದು ಕಂಡುಬರುತ್ತಿದೆ. ಆದರೆ ಸಂಬಂಧಿಸಿದ ಅಧಿಕಾರಿಗಳು ವಾಹನ ನೋಂದಣಿ ಸಂಖ್ಯೆ ತಿರುಚುತ್ತಿರುವವ ವಾಹನಗಳತ್ತ ಗಮನ ಹರಿಸುತ್ತಿಲ್ಲ. ಪರಿಣಾಮ ವಾಹನ ನೋಂದಣಿ ಸಂಖ್ಯೆ ತಿರುಚುವ ಕ್ರಿಯೆ ಸಾಂಕ್ರಾಮಿಕದಂತೆ ಹರಡುವ ಸಾಧ್ಯತೆ ದಟ್ಟವಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಸಫಲವಾಗದ ಸುಗಮ ಸಂಚಾರ&lt;/strong&gt;&lt;/h2&gt;&lt;p&gt;ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ, ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಪಟ್ಟಣದ ಹೃದಯ ಭಾಗವಾಗಿರುವ ಕಾಲಕಾಲೇಶ್ವರ ವೃತ್ತ ಸೇರಿ, ದುರ್ಗಾ ವೃತ್ತ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ಮುಂಭಾಗ ಹಾಗೂ ಪ್ರಮುಖ ರಸ್ತೆ ಸೇರಿ ಅಂದಾಜು 19 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.&lt;/p&gt;&lt;p&gt;ಹೀಗಾಗಿ ಪಟ್ಟಣದ ಪ್ರಮುಖ ವೃತ್ತ, ರಸ್ತೆ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಸೇರುವ ಜನದಟ್ಟನೆ ಮತ್ತು ಉಂಟಾಗುವ ವಾಹನ ದಟ್ಟಣೆಯ ದೃಶ್ಯಗಳನ್ನು ಪೊಲೀಸ್ ಠಾಣೆಯಲ್ಲಿನ ಟಿವಿ ಪರದೆಯಲ್ಲಿ ವೀಕ್ಷಿಸಲಾಗುತ್ತಿದೆ. ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿವಾರಣೆಗೆ ಅಗತ್ಯ ಸಂದೇಶವನ್ನು ಕ್ಷಣಾರ್ಧದಲ್ಲಿ ಪೊಲೀಸ್ ಠಾಣೆಯ ಮೂಲಕ ಕರ್ತವ್ಯದಲ್ಲಿನ ಸಿಬ್ಬಂದಿಗೆ ರವಾನಿಸಿ ಸುಗಮ ಸಂಚಾರಕ್ಕೆ ಪರಿಹಾರ ಕಂಡುಕೊಳ್ಳಲು ಸಿಟಿ ಕ್ಯಾಮೆರಾ ದೃಶ್ಯಗಳು ಸಹಕಾರಿಯಾಗಿವೆ. ಆದರೆ ಕಾಲಕಾಲೇಶ್ವರ ವೃತ್ತ ಸೇರಿ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಅಡ್ಡಾದಿಡ್ಡಿ ನಿಲ್ಲುವ ವಾಹನಗಳು ಹಾಗೂ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿರುವ ಪರಿಣಾಮ ಪಟ್ಟಣದಲ್ಲಿ ಸುಗಮ ಸಂಚಾರದ ಅರ್ಥ ತಿಳಿಯುತ್ತಿಲ್ಲ ಎಂದು ವಾಹನ ಸವಾರರು ಗೋಳಿಡುತ್ತಿದ್ದಾರೆ.&lt;/p&gt;&lt;h3&gt;&lt;strong&gt;ರಸ್ತೆ ಅತಿಕ್ರಮಣ&lt;/strong&gt;&lt;/h3&gt;&lt;p&gt;ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಯಾವಾಗ ಆರಂಭ ಇರುತ್ತದೆ, ಯಾವಾಗ ಬಂದ್ ಆಗುತ್ತದೆ ಎಂಬುದು ವಾಹನ ಸವಾರರಿಗೆ ತಿಳಿಯದಂತಾಗಿದೆ. ರೋಣ, ಕುಷ್ಟಗಿ, ಬಸ್ ನಿಲ್ದಾಣ ಸೇರಿ ಜೋಡು ರಸ್ತೆಯಲ್ಲಿನ ಪಾದಚಾರಿಗಳ ರಸ್ತೆಯನ್ನು ಮನಸೋ ಇಚ್ಛೆ ಅಂಗಡಿಕಾರರು ಅತಿಕ್ರಮಣ ಮಾಡಿದ್ದು, ಪಾದಚಾರಿಗಳ ರಸ್ತೆ ಮಾಯವಾಗಿದೆ.&lt;/p&gt;&lt;p&gt;ಪಟ್ಟಣದ ಪ್ರಮುಖ ವೃತ್ತಗಳಲ್ಲಿಯೇ ಅಡ್ಡಾದಿಡ್ಡಿ ವಾಹನ ನಿಲುಗಡೆ ಹಾಗೂ ವಾಣಿಜ್ಯ ಮಳಿಗೆಗಳ ಕಚ್ಚಾವಸ್ತುಗಳು ಫುಟ್&zwnj;ಪಾತ್ ಮೇಲೆ ಹಾಕುವ ಪರಿಣಾಮ ಪಟ್ಟಣದ ಪ್ರಮುಖ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ತುರ್ತು ವೈದ್ಯಕೀಯ ಸೇರಿ ಅಗತ್ಯ ಕೆಲಸಗಳಿಗೆ ತೆರಳುವ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ವಾಹನ ನೋಂದಣಿ ತಿದ್ದುಪಡಿ ಮಾಡಿದ ವಾಹನ ಮಾಲೀಕರ ಮೇಲೆ ಕ್ರಮಕ್ಕೆ ಮುಂದಾಗಬೇಕು. ಅಲ್ಲದೆ ಅಪ್ರಾಪ್ತ ಯುವಕರ ಕರ್ಕಶ ಶಬ್ದದೊಂದಿಗೆ ವೇಗವಾಗಿ ಹಾಗೂ ತ್ರಿಬಲ್ ರೈಡಿಂಗ್ ವಾಹನ ಚಾಲನೆಗೆ ನಿರ್ಬಂಧ ಹೇರಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಆಡಳಿತ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Gadag: ಜಲಸಂಕಷ್ಟಕ್ಕೆ ಮುಕ್ತಿ; ಬರೋಬ್ಬರಿ ₹115 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಮಹಾ ಯೋಜನೆ&lt;/strong&gt;&lt;/p&gt;&lt;p&gt;ಪಟ್ಟಣದಲ್ಲಿ ಕೆಲವರು ಬೈಕ್ ಗಳ ನೋಂದಣಿ ಸಂಖ್ಯೆ ತಿರುಚುವುದು ಹಾಗೂ ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಆಗುವ ತಪ್ಪುಗಳ ಬಗ್ಗೆ ಜಾಗೃತಿ ಜತೆಗೆ ಅಂತಹ ವಾಹನಗಳ ಮಾಲೀಕರ ಮೇಲೆ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಬೇಕು. ಅಲ್ಲದೆ ಸಂಚಾರ ನಿಯಮಗಳ ಪಾಲನೆ ವಿಷಯದಲ್ಲಿ ಪೊಲೀಸರು ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ರಾಜಕೀಯ ವ್ಯಕ್ತಿಗಳು ಹಾಗೂ ಪ್ರತಿಯೊಬ್ಬರೂ ಪೊಲೀಸರಿಗೆ ಸಹಕರಿಸಬೇಕು ಎಂದು ಗಜೇಂದ್ರಗಡ ವಕೀಲ ಎಂ.ಎಸ್. ಹಡಪದ ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗಜೇಂದ್ರಗಢದಲ್ಲಿ ಕ್ವಿಂಟಾಲ್ ಶೇಂಗಾ 11 ಸಾವಿರಕ್ಕೂ ಅಧಿಕ ದರಕ್ಕೆ ಮಾರಾಟ: ರೈತರು ಖುಷ್&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/motorists-turn-left-to-avoid-the-third-eye-traffic-police-cctv-camera-in-gajendragadh-gadag-mrq/articleshow-xxon7r5"/>
        </item>
        <item>
            <title><![CDATA[ಗದಗ: ಮುಂಡರಗಿಯ ಉದ್ಯಾನದಲ್ಲಿ ಹಸಿರೇ ಇಲ್ಲ! ಹೀಗೆ ಮಾಡಿದ್ರೆ ಕಳೆದುಹೋದ ಆ ವೈಭವ ಮರಳೋದು ಹೇಗೆ?]]></title>
            <link>https://kannada.asianetnews.com/karnataka-districts/gadag-mundargi-park-falls-into-neglect-once-vibrant-public-space-now-lies-abandoned-gdp/articleshow-yrgglg7</link>
            <guid isPermaLink="true">https://kannada.asianetnews.com/karnataka-districts/gadag-mundargi-park-falls-into-neglect-once-vibrant-public-space-now-lies-abandoned-gdp/articleshow-yrgglg7</guid>
            <pubDate>Wed, 15 Apr 2026 21:06:56 +0530</pubDate>
            <description><![CDATA[ಒಂದು ಕಾಲದಲ್ಲಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದ ಮುಂಡರಗಿಯ ಪುರಸಭೆ ಉದ್ಯಾನವನವು ಇಂದು ನಿರ್ಲಕ್ಷ್ಯದಿಂದಾಗಿ ಬಿಕೋ ಎನ್ನುತ್ತಿದೆ. ಹಸಿರು, ಕಾರಂಜಿ, ಮಕ್ಕಳ ಆಟಿಕೆಗಳಿಲ್ಲದೆ ಪಾಳುಬಿದ್ದಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಉದ್ಯಾನವನ್ನು ಪುನಶ್ಚೇತನಗೊಳಿಸಿ, ಸಾರ್ವಜನಿಕ ಬಳಕೆಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp8wjfq899qcbsvm92vrtfd0,imgname-mundargi-municipal-park-1776267378408.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಶರಣು ಸೊಲಗಿ&lt;/p&gt;&lt;p&gt;&lt;strong&gt;ಮುಂಡರಗಿ&lt;/strong&gt;: ಒಂದು ಕಾಲದಲ್ಲಿ ಕಾರಂಜಿ, ರಂಗುರಂಗಿನ ವಿದ್ಯುತ್ ದೀಪಾಲಂಕಾರ ಹಾಗೂ ಹಚ್ಚ ಹಸುರಿನ ಗಿಡ-ಮರಗಳು, ಮಕ್ಕಳ ಜಾರುಬಂಡಿ, ಜೋಕಾಲಿಯಿಂದ ಎಲ್ಲರನ್ನೂ ಆಕರ್ಷಿಸುತ್ತಿದ್ದ ಪುರಸಭೆ ಪಕ್ಕದ ಉದ್ಯಾನ ಈಗ ಬಿಕೋ ಎನ್ನುತ್ತಿದೆ.&lt;/p&gt;&lt;p&gt;ಪಟ್ಟಣದ ಮಧ್ಯವರ್ತಿ ಸ್ಥಳವಾದ ಹೇಮರಡ್ಡಿ ಮಲ್ಲಮ್ಮ ವೃತ್ತಕ್ಕೆ (ಬೃಂದಾವನ ಸರ್ಕಲ್) ಸಮೀಪ ಹಾಗೂ ಪುರಸಭೆ ಉದ್ಯಾನ ಎಂದೇ ಖ್ಯಾತವಾಗಿರುವ ಈ ಉದ್ಯಾನ ಪಟ್ಟಣಕ್ಕೆ ಬರುವ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ನಿತ್ಯ ಮಧ್ಯಾಹ್ನ ಬಂದು ಕುಳಿತುಕೊಳ್ಳಲು ವಿಶ್ರಾಂತಿ ತಾಣವಾಗಿತ್ತು. ವಿದ್ಯಾರ್ಥಿಗಳು ಮಧ್ಯಾಹ್ನ ಇಲ್ಲಿಯೇ ಕುಳಿತು ಊಟ ಮಾಡುತ್ತಿದ್ದರು. ಹೀಗಾಗಿ ಇದನ್ನು ಆಶ್ರಯಿಸಿದ್ದ ಎಲ್ಲರಿಗೂ ತೊಂದರೆಯಾದಂತಾಗಿದೆ.&lt;/p&gt;&lt;h2&gt;ಉದ್ಯಾನ ಒಳಗಡೆಗೆ ಅನೈತಿಕ ಚಟುವಟಿಕೆ&lt;/h2&gt;&lt;p&gt;ಈ ಉದ್ಯಾನದಲ್ಲಿ ಈಗ ಯಾವುದೇ ಗಿಡ-ಮರಗಳಿಲ್ಲ, ನೆಲದಲ್ಲಿ ಹುಲ್ಲಿಲ್ಲ. ಕುಳಿತಕೊಳ್ಳೋಣ ಎಂದರೆ ಮಣ್ಣು-ಧೂಳು. ಹುಲ್ಲುಹಾಸು ಇಲ್ಲದ ಕಾರಣ ಉದ್ಯಾನದಲ್ಲಿ ಈಗ ಕೆಲವು ಹುಡುಗರು ಕ್ರಿಕೆಟ್&zwnj; ಆಡುತ್ತಾರೆ. ಅಲ್ಲದೇ ಉದ್ಯಾನ ಒಳಗಡೆಗೆ ಅನೈತಿಕ ಚಟುವಟಿಕೆಯೂ ನಡೆಯುತ್ತಿರುವುದು ಕಂಡು ಬರುತ್ತಿದೆ. ಕಾರಂಜಿ ಸ್ಥಗಿತಗೊಂಡಿದೆ. ಮಕ್ಕಳಿಗೆ ಜೋಕಾಲಿ, ಜಾರು ಬಂಡಿ ಯಾವುದೂ ಕಾಣುತ್ತಿಲ್ಲ.&lt;/p&gt;&lt;p&gt;ಇದೀಗ ಬೇಸಿಗೆ ಪ್ರಾರಂಭವಾಗಿದ್ದು, ಒಂದಿಷ್ಟು ಹುಲ್ಲುಹಾಸು ನಿರ್ಮಿಸಿ, ವಿವಿಧ ಬಗೆಯ ಹೂವಿನ ಗಿಡಗಳನ್ನು ನೆಟ್ಟು, ನಿತ್ಯ ಅವುಗಳಿಗೆ ನೀರಿನ ವ್ಯವಸ್ಥೆ ಮಾಡಿ ಬೆಳೆಸುವ ಜತೆಗೆ ಇಲ್ಲಿಗೆ ಬಂದು ಊಟ ಮಾಡಿ ವಿಶ್ರಾಂತಿ ಪಡೆಯುವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ.&lt;/p&gt;&lt;p&gt;ಪುರಸಭೆಯಿಂದ ಹಸಿರು ಹೆಚ್ಚಿಸುವ ಕೆಲಸ ಮಾಡಿ, ಕಾರಂಜಿ ಪ್ರಾರಂಭಿಸಿ, ಬೆಳಗ್ಗೆ ಹಾಗೂ ಸಂಜೆ ಪಟ್ಟಣದ ಹಿರಿಯ ನಾಗರಿಕರು, ಮಹಿಳೆಯರು ಬಂದು ವಾಯು ವಿಹಾರ ಮಾಡಿ, ವಿಶ್ರಾಂತಿ ಪಡೆಯುವಂತೆ ಅನುಕೂಲ ಮಾಡಿಕೊಡಬೇಕೆನ್ನುವುದು ಸ್ಥಳೀಯರ ಒತ್ತಾಯವಾಗಿದೆ.&lt;/p&gt;&lt;h2&gt;ಗಮನ ಹರಿಸಲಿ&lt;/h2&gt;&lt;p&gt;1992ರಲ್ಲಿ ತಾವು ಪುರಸಭೆ ಅಧ್ಯಕ್ಷರಾಗಿದ್ದಾಗ ಸಾರ್ವಜನಿಕರ ವಂತಿಕೆ ಹಣದಿಂದ ಕಾರಂಜಿ ವ್ಯವಸ್ಥೆ ಹಾಗೂ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಂದು ಈ ಉದ್ಯಾನ ಹಸಿರಿಲ್ಲದೇ ಬಿಕೋ ಎನ್ನುತ್ತಿರುವುದು ವಿಷಾದನೀಯ. ಪುರಸಭೆ ಅಧಿಕಾರಿಗಳು ಗಮನಹರಿಸಿ ಮತ್ತೆ ಹಸಿರಿನಿಂದ ಕಂಗೊಳಿಸುವಂತೆ ಮಾಡಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ವೈ.ಎನ್. ಗೌಡರ್ ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/gadag-mundargi-park-falls-into-neglect-once-vibrant-public-space-now-lies-abandoned-gdp/articleshow-yrgglg7"/>
        </item>
        <item>
            <title><![CDATA[ಬೆಂಗಳೂರು-ವಿಜಯಪುರ ನಡುವೆ ಬೈಪಾಸ್ ರೈಲು ಸಂಚಾರ ಆರಂಭ: 5 ಗಂಟೆ ಸಮಯ ಉಳಿತಾಯಕ್ಕೆ ಸಚಿವ ಎಂ.ಬಿ. ಪಾಟೀಲ ಸಂತಸ!]]></title>
            <link>https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</link>
            <guid isPermaLink="true">https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q</guid>
            <pubDate>Fri, 15 May 2026 19:41:15 +0530</pubDate>
            <description><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kr7vqdjdvnc1cy078ydnn1kj,imgname-idnian-railways--3--1778380420685.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರು-ವಿಜಯಪುರ ನಡುವೆ ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ಪ್ರಯಾಣದ ಸಮಯವನ್ನು ಸುಮಾರು 5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಸಚಿವ ಎಂ.ಬಿ. ಪಾಟೀಲರ ಮನವಿಯ ಮೇರೆಗೆ ಆರಂಭವಾದ ಈ ಸೇವೆಯನ್ನು ಕಾಯಂಗೊಳಿಸಲು ಮತ್ತು ವೇಳಾಪಟ್ಟಿ ಬದಲಾವಣೆಗೆ ಆಗ್ರಹಿಸಲಾಗಿದೆ.&lt;img&gt;&lt;p&gt;ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು-ವಿಜಯಪುರ ನಡುವಿನ ತ್ವರಿತ ರೈಲು ಸೇವೆಗೆ ಈಗ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ವಿಶೇಷ ರೈಲು ಓಡಿಸುವ ಸಚಿವ ಎಂ.ಬಿ. ಪಾಟೀಲರ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬೆಳವಣಿಗೆಯ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ತಮ್ಮ ಮನವಿಗೆ ಸ್ಪಂದಿಸಿ ವಿಶೇಷ ರೈಲು ಆರಂಭಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಎಂ.ಬಿ. ಪಾಟೀಲರು ವಿಜಯಪುರ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಅವರು ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆದು, ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸುವುದರಿಂದ ಸಮಯ ಉಳಿತಾಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದರು.&lt;/p&gt;&lt;img&gt;&lt;p&gt;ಸದ್ಯ ವಿಜಯಪುರ ಮತ್ತು ಬೆಂಗಳೂರು ನಡುವೆ ರೈಲು ಪ್ರಯಾಣಕ್ಕೆ ಸುಮಾರು 15 ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ. ಆದರೆ, ರೈಲುಗಳು ಹುಬ್ಬಳ್ಳಿ ನಗರದೊಳಗೆ ಹೋಗುವ ಬದಲು ಹುಬ್ಬಳ್ಳಿ ಬೈಪಾಸ್ ಮೂಲಕ ಸಂಚರಿಸಿದರೆ ಈ ಸಮಯವನ್ನು ಕೇವಲ 10 ಗಂಟೆಗಳಿಗೆ ಇಳಿಸಬಹುದು.&amp;nbsp;&lt;/p&gt;&lt;p&gt;ಇದರಿಂದ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ರಾಜಧಾನಿಗೆ ಬರಲು ಮತ್ತು ಹೋಗಲು ಲಭ್ಯವಿರುವ ಅತ್ಯಂತ ವೇಗದ ಸಾರಿಗೆ ಇದಾಗಲಿದೆ ಎಂದು ಎಂ.ಬಿ. ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;img&gt;&lt;p&gt;ನೈರುತ್ಯ ರೈಲ್ವೆಯು ಈ ವಿಶೇಷ ರೈಲನ್ನು ಜೂನ್ 28ರವರೆಗೆ ಓಡಿಸಲು ನಿರ್ಧರಿಸಿದೆ.&lt;/p&gt;&lt;p&gt;&lt;strong&gt;ಯಶವಂತಪುರದಿಂದ: &lt;/strong&gt;ಪ್ರತೀ ಶನಿವಾರ ಬೆಂಗಳೂರಿನಿಂದ ಹೊರಡಲಿದೆ.&lt;/p&gt;&lt;p&gt;&lt;strong&gt;ವಿಜಯಪುರದಿಂದ:&lt;/strong&gt; ಪ್ರತೀ ಭಾನುವಾರ ಹಿಂತಿರುಗಲಿದೆ.&lt;/p&gt;&lt;p&gt;&lt;strong&gt;ಬೋಗಿಗಳು:&lt;/strong&gt; ಒಟ್ಟು 19 ಬೋಗಿಗಳನ್ನು ಈ ರೈಲು ಹೊಂದಿರಲಿದೆ.&lt;/p&gt;&lt;p&gt;&lt;strong&gt;ನಿಲುಗಡೆಗಳು:&lt;/strong&gt; ತುಮಕೂರು, ಅರಸೀಕೆರೆ, ದಾವಣಗೆರೆ, ಹಾವೇರಿ, ಗದಗ ಬೈಪಾಸ್, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಮತ್ತು ಬಸವನ ಬಾಗೇವಾಡಿ ನಿಲ್ದಾಣಗಳಲ್ಲಿ ಈ ರೈಲು ನಿಲ್ಲಲಿದೆ.&lt;/p&gt;&lt;img&gt;&lt;p&gt;ಈ ವಿಶೇಷ ರೈಲನ್ನು ಕೇವಲ ಒಂದು ತಿಂಗಳಿಗೆ ಸೀಮಿತಗೊಳಿಸದೆ, ತ್ವರಿತವಾಗಿ ಕಾಯಂ ರೈಲನ್ನಾಗಿ ಪರಿವರ್ತಿಸಬೇಕು ಎಂದು ಸಚಿವರು ಮತ್ತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.&amp;nbsp;&lt;/p&gt;&lt;img&gt;&lt;p&gt;&lt;strong&gt;ಸೂಕ್ತ ಸಮಯ: &lt;/strong&gt;ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟು ಬೆಳಿಗ್ಗೆ 6ಕ್ಕೆ ವಿಜಯಪುರ ತಲುಪುವಂತಿರಬೇಕು. ಅದೇ ರೀತಿ ವಿಜಯಪುರದಿಂದ ರಾತ್ರಿ 8ಕ್ಕೆ ಹೊರಟು ಬೆಳಿಗ್ಗೆ 6ಕ್ಕೆ ಬೆಂಗಳೂರಿಗೆ ತಲುಪುವಂತಿರಬೇಕು.&lt;/p&gt;&lt;p&gt;&lt;strong&gt;ಯಶವಂತಪುರ ತಲುಪುವ ಸಮಯ: &lt;/strong&gt;ಈಗಿನ ವಿಶೇಷ ರೈಲು ಮುಂಜಾನೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಇದು ಪ್ರಯಾಣಿಕರಿಗೆ ಮನೆಗಳಿಗೆ ಹೋಗಲು ಕಷ್ಟಕರವಾಗುವುದರಿಂದ, ಮುಂಜಾನೆ 5:30 ರಿಂದ 6 ಗಂಟೆಯ ಸುಮಾರಿಗೆ ತಲುಪುವಂತೆ ಮಾಡಬೇಕು ಎಂದು ಅವರು ಕೋರಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/indian-railway-bengaluru-vijayapura-special-train-via-hubli-gadag-bypass-mb-patil-happy-sat-zh12z5q"/>
        </item>
    </channel>
</rss>
