<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 27 Aug 2026 14:01:53 +0530</lastBuildDate>
        <atom:link href="https://kannada.asianetnews.com/rss/gadag" rel="self" type="application/rss+xml"/>
        <item>
            <title><![CDATA[Gadag: ಗದುಗಿನ ಐತಿಹಾಸಿಕ ಸರಸ್ವತಿ ದೇಗುಲದಲ್ಲಿ ದೇವಿ ಮೂರ್ತಿ ಭಗ್ನಗೊಳಿಸಿ ವಿಕೃತಿ!]]></title>
            <link>https://kannada.asianetnews.com/karnataka-districts/gadag-histroric-saraswati-temple-idol-of-goddess-vandalism-by-miscreants-rav/articleshow-2kyud4a</link>
            <guid isPermaLink="true">https://kannada.asianetnews.com/karnataka-districts/gadag-histroric-saraswati-temple-idol-of-goddess-vandalism-by-miscreants-rav/articleshow-2kyud4a</guid>
            <pubDate>Mon, 13 Jul 2026 06:47:22 +0530</pubDate>
            <description><![CDATA[&lt;p&gt;ಗದಗದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುರಾತನ ಸರಸ್ವತಿ ದೇವಿಯ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. 8ನೇ ಶತಮಾನಕ್ಕೆ ಸೇರಿದ ಈ ದೇವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ರಕ್ಷಣೆಯಲ್ಲಿದ್ದು, ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxcg4qqdtxdx54hxkzxxq8y0,imgname-----------------------2026-07-13t063152.456-1783904755437.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.13): &lt;/strong&gt;ನಗರದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುರಾತನ ಸರಸ್ವತಿ ದೇವಿಯ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;h2&gt;ಗದಗ ಐತಿಹಾಸಿಕ ಸರಸ್ವತಿ ದೇಗುಲದ ದೇವಿ ಮೂರ್ತಿ ಭಗ್ನ!&lt;/h2&gt;&lt;p&gt;ಐತಿಹಾಸಿಕ ಮಹತ್ವವುಳ್ಳ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಸರಸ್ವತಿ ದೇವಸ್ಥಾನದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ದುಷ್ಕರ್ಮಿಗಳು ದೇವಿಯ ಮೂರ್ತಿಯ ಎದೆಭಾಗವನ್ನು ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ. ಕಳೆದ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಶನಿವಾರ ಮಧ್ಯಾಹ್ನ ವಿಷಯ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;8ನೇ ಶತಮಾನದ ಗದಗನ ಸರಸ್ವತಿ ದೇವಾಲಯ&lt;/h3&gt;&lt;p&gt;ಈ ದೇವಾಲಯವು ಸುಮಾರು 8ನೇ ಶತಮಾನಕ್ಕೆ ಸೇರಿದ್ದು, ತನ್ನ ವಾಸ್ತುಶಿಲ್ಪ ವೈಭವಕ್ಕೆ ಹೆಸರುವಾಸಿಯಾಗಿದೆ. ಪ್ರಸ್ತುತ ಈ ದೇವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ರಕ್ಷಣೆಯಲ್ಲಿದೆ. ಇಂತಹ ಸೂಕ್ಷ್ಮ ಹಾಗೂ ಐತಿಹಾಸಿಕ ಮಹತ್ವದ ಸ್ಥಳದಲ್ಲಿ ಭದ್ರತಾಲೋಪ ಉಂಟಾಗಿರುವುದು ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;p&gt;ಘಟನೆ ನಡೆದ ತಕ್ಷಣವೇ ಗದಗ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿರುವ ಕುರುಹುಗಳನ್ನು ಸಂಗ್ರಹಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.&lt;/p&gt;&lt;p&gt;&lt;strong&gt;ಅಡವೀಂದ್ರಸ್ವಾಮಿ ಮಠದಲ್ಲಿ ಶಿವಾನುಭವ&lt;/strong&gt;&lt;/p&gt;&lt;p&gt;ಗದಗ: \Bಪುಣ್ಯಕ್ಷೇತ್ರಗಳ ದರ್ಶನದಿಂದ ಮಾನವ ಜನ್ಮ ಸಾರ್ಥಕವಾಗುತ್ತದೆ. ಕೈಕಾಲು ಗಟ್ಟಿ ಇರುವಾಗಲೇ ಯಾತ್ರೆ ಮಾಡಬೇಕೆಂದು ಅಡ್ನೂರು ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಶ್ರೀಗಳು ತಿಳಿಸಿದರು.&lt;/p&gt;&lt;p&gt;ನಗರದ ಅಡವೀಂದ್ರಸ್ವಾಮಿ ಮಠದ ಅನ್ನಪೂರ್ಣೇಶ್ವರಿ ಮಂದಿರದಲ್ಲಿ ಜರುಗಿದ 349ನೇ ಶಿವಾನುಭವ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.&lt;/p&gt;&lt;p&gt;ಶ್ರೀಮಠದ ಧರ್ಮದರ್ಶಿ ಮಹೇಶ್ವರ ಸ್ವಾಮಿಗಳು ಮಾತನಾಡಿ, ಲಿಂ. ಗಂಗಾಧರ ಸ್ವಾಮಿಗಳು, ಕೆ. ಸುಧಾಕರ್ ರಾವ್, ಡಾ. ಬಿ.ಎಫ್. ದಂಡಿ ಹಾಗೂ ಲಿಂ. ಪಾಂಡುರಂಗ ಕುರ್ತುಕೋಟಿ ಅವರ ಸೇವೆಯನ್ನು ಸ್ಮರಿಸಿ, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ವಿರೂಪಾಕ್ಷಯ್ಯ ಹೊಸಳ್ಳಿಮಠ್ ಕೇದಾರ, ಬದರಿನಾಥ್ ಮಹಿಮೆ ಕುರಿತು ಉಪನ್ಯಾಸ ನೀಡಿದರು.&lt;/p&gt;&lt;p&gt;ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ. ರಾಜೇಂದ್ರ ಎಸ್. ಗಡಾದ ಯಾತ್ರೆಯು ಮನಸ್ಸಿಗೆ ಶಾಂತಿ ನೀಡುತ್ತದೆ ಎಂದರು. ಸುಜಾತಾ ದೊಡ್ಡಮನಿ ಹಾಗೂ ಚನ್ನಬಸಯ್ಯ ಹೇಮಗಿರಿಮಠ ನುಡಿನಮನ ಸಲ್ಲಿಸಿದರು.&lt;/p&gt;&lt;p&gt;ಇದೇ ವೇಳೆ ಪುಣ್ಯಕ್ಷೇತ್ರಗಳ ದರ್ಶನ ಮಾಡಿದ ವಿರೂಪಾಕ್ಷಯ್ಯ ಹೊಸಳ್ಳಿಮಠ, ವಿಜಯಕುಮಾರ ಹಿರೇಮಠ, ಡಾ. ರಾಜೇಂದ್ರ ಎಸ್. ಗಡಾದ, ಜ್ಯೋತಿ ಗಡಾದ, ಕಬಾಡಿ ಸಹೋದರ ದಂಪತಿಗಳನ್ನು ಹಾಗೂ ಸವಿತಾ ಹೊಸಳ್ಳಿಮಠ, ಗುರಪ್ಪ ನಿಡಗುಂದಿ ದಂಪತಿ ಮತ್ತು ಶ್ರೀಮತಿ ಬಳಿಗಾರ ಅವರನ್ನು ಸತ್ಕರಿಸಲಾಯಿತು.&lt;/p&gt;&lt;p&gt;ವೀರೇಶ್ವರ ಸ್ವಾಮಿಗಳಿಂದ ವೇದಘೋಷ ನಡೆಯಿತು. ಪ್ರಕಾಶ ಬಂಡಿ ಸ್ವಾಗತಿಸಿದರು, ವಿ.ಎಂ. ಕುಂದ್ರಾಳಹಿರೇಮಠ ನಿರೂಪಿಸಿದರು, ಎಂ.ಎಂ. ಜೋಗಿನ ವಂದಿಸಿದರು. ಚನ್ನಬಸಪ್ಪ ಕಾಳಗಿ, ಪ್ರೊ. ಸಿ. ಲಿಂಗಾರೆಡ್ಡಿ ಉಪಸ್ಥಿತರಿದ್ದರು. ಬಿ.ಎಂ. ಬಿಳೆಯಲಿ, ಜಿ.ಎಂ. ಯಾನಂ ಶೆಟ್ಟಿ, ಡಾ. ಎಲ್.ವಿ. ಪಾಟೀಲ್, ಸುಶೀಲಾ ಕೋಟಿ ಮತ್ತಿತರರು ಪಾಲ್ಗೊಂಡಿದ್ದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-histroric-saraswati-temple-idol-of-goddess-vandalism-by-miscreants-rav/articleshow-2kyud4a"/>
        </item>
        <item>
            <title><![CDATA[ಗ್ರಾಪಂಗೆ ಕಸದ ಉಡುಗೊರೆ; ಗ್ರಾಮಸ್ಥರ ವಿರುದ್ಧವೇ ದೂರು ದಾಖಲಿಸಲು ಸೂಚಿಸಿದ ಅಧಿಕಾರಿ]]></title>
            <link>https://kannada.asianetnews.com/karnataka-districts/gadag-condemning-the-negligence-of-cleanliness-people-poured-sewage-waste-in-front-of-gram-panchayat-mrq/articleshow-52c4f6l</link>
            <guid isPermaLink="true">https://kannada.asianetnews.com/karnataka-districts/gadag-condemning-the-negligence-of-cleanliness-people-poured-sewage-waste-in-front-of-gram-panchayat-mrq/articleshow-52c4f6l</guid>
            <pubDate>Wed, 29 Jul 2026 07:57:01 +0530</pubDate>
            <description><![CDATA[&lt;p&gt;ಸ್ವಚ್ಛತಾ ನಿರ್ಲಕ್ಷ್ಯವನ್ನು ಖಂಡಿಸಿ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿ ಎದುರು ಚರಂಡಿಯ ಕಸವನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ ಈ ರೀತಿಯ ಪ್ರತಿಭಟನೆ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kynty9z43x6zm6cc52m3f7k6,imgname-soodi-gram-panchayat-1785291810788.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ಬಡಾವಣೆಯಲ್ಲಿ ಸ್ವಚ್ಛತೆಗೆ ಗ್ರಾಮ ಪಂಚಾಯಿತಿಯವರು ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿ ಚರಂಡಿಯ ಗಲೀಜು ಹಾಗೂ ಮಣ್ಣು, ಕಸವನ್ನು ಗ್ರಾಪಂ ಮುಂದೆ ಸುರಿದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ತಾಲೂಕಿನ ಸೂಡಿ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ಕಳೆದ ಕೆಲ ತಿಂಗಳಿನಿಂದ ಗ್ರಾಮದ ರಾಜೀವ್ ಗಾಂಧಿ ಬಡಾವಣೆಯಲ್ಲಿನ ಚರಂಡಿಗಳಲ್ಲಿ ನೀರು, ಕಸ ಹಾಗೂ ಕಡ್ಡಿ ನಿಂತು ಗಬ್ಬು ವಾಸನೆ ಹರಡುತ್ತಿದೆ. ಪರಿಣಾಮ ಸಂಜೆಯಾದರೆ ಮನೆಯಲ್ಲಿ ಸೊಳ್ಳೆಗಳ ಹಾವಳಿ, ಗಬ್ಬು ವಾಸನೆ ಹರಡಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು.&lt;/p&gt;&lt;h2&gt;&lt;strong&gt;ಗ್ರಾಮ ಪಂಚಾಯಿತಿ ಎದುರು ಕಸ ಸುರಿದು ಆಕ್ರೋಶ&lt;/strong&gt;&lt;/h2&gt;&lt;p&gt;ಬಡಾವಣೆಯ ಚರಂಡಿ ಸ್ವಚ್ಛತೆಗೆ ಮುಂದಾಗಬೇಕೆಂದು ಆಗ್ರಹಿಸಿ ನಿವಾಸಿಗಳು ಗ್ರಾಪಂ ಅಧಿಕಾರಿಗಳ ಎದುರು ಹಲವಾರು ಬಾರಿ ಗೋಗರೆದರೂ ಸ್ಪಂದಿಸಿರಲಿಲ್ಲ. ಇದರಿಂದ ಬೇಸತ್ತ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಗಳು ಮಂಗಳವಾರ ಬೆಳಗ್ಗೆ ಬಡಾವಣೆಯಲ್ಲಿನ ಚರಂಡಿಗಳಲ್ಲಿನ ಗಲೀಜು ಸೇರಿ ಕಸ, ಮಣ್ಣು ತಂದು ಗ್ರಾಮ ಪಂಚಾಯಿತಿ ಎದುರು ಸುರಿದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮ, ಪಟ್ಟಣ ಸೇರಿ ನಗರ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಸಾಕಷ್ಟು ಪ್ರಚಾರ ಮಾಡುತ್ತಿವೆ. ಆದರೆ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡದೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಘಟನೆ ಕುರಿತು ಪಿಡಿಒ ಬಸವಂತಪ್ಪ ವಡ್ಡರ ಅವರನ್ನು ದೂರವಾಣಿ ಮೂಲಕ ಅನೇಕ ಬಾರಿ ಸಂರ್ಪಕಿಸಿದರೂ ಕರೆ ಸ್ವೀಕರಿಸಲಿಲ್ಲ.&lt;/p&gt;&lt;p&gt;ಗ್ರಾಮದ ರಾಜೀವ್ ಗಾಂಧಿ ಬಡಾವಣೆಯಲ್ಲಿನ ಚರಂಡಿಯನ್ನು ಸ್ವಚ್ಛಗೊಳಿಸುವಂತೆ ಅನೇಕ ಬಾರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಪರಿಣಾಮ ಚರಂಡಿಗಳಲ್ಲಿ ತುಂಬಿದ್ದ ಕಸ, ಕಡ್ಡಿಯನ್ನು ತಂದು ಸೂಡಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಸುರಿಯಲಾಗಿದೆ. ಇನ್ನಾದರೂ ಗ್ರಾಮದ ನಿವಾಸಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲು ಗ್ರಾಪಂ ಮುಂದಾಗಲಿ ಎಂದು ಸೂಡಿ ಗ್ರಾಮದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಗಳು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಆಗಸ್ಟ್ ಮೊದಲ ದಿನವೇ ಮೈಸೂರಿಗೆ ಪ್ರಧಾನಿ ಮೋದಿ! ಸಮಯ, ಸ್ಥಳ, ವಿಶೇಷತೆ ಸಂಪೂರ್ಣ ವಿವರ ಇಲ್ಲಿದೆ&lt;/strong&gt;&lt;/p&gt;&lt;h3&gt;&lt;strong&gt;ದೂರು ದಾಖಲಿಸಲು ಸೂಚನೆ&lt;/strong&gt;&lt;/h3&gt;&lt;p&gt;ತಾಲೂಕಿನ ಸೂಡಿ ಗ್ರಾಮ ಪಂಚಾಯಿತಿ ಎದುರು ದಿಢೀರನೇ ಕಸ ತಂದು ಹಾಕಿದ್ದು ತಪ್ಪು. ಮೇಲಧಿಕಾರಿಗಳಿಗೆ ತಿಳಿಸಬಹುದಿತ್ತು. ಕಸ ತಂದು ಹಾಕಿರುವವರ ಮೇಲೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತಿಳಿಸಲಾಗುವುದು. ಜತೆಗೆ ಸುರಿದಿರುವ ಕಸವನ್ನು ಸ್ವಚ್ಛಗೊಳಿಸಲು ತಿಳಿಸಿದ್ದೇನೆ ಎಂದು ತಾಪಂ ಇಒ ಚಂದ್ರಶೇಖರ ಕಂದಕೂರ ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತುಂಗಭದ್ರಾ ಎಥೆನಾಲ್ ಘಟಕ ನಮ್ಮೂರಿಗೆ ಬೇಡ, ಕೂಡಲೇ ಸ್ಥಗಿತಗೊಳಿಸಿ; ಗ್ರಾಮಸ್ಥರ ಬೇಡಿಕೆ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-condemning-the-negligence-of-cleanliness-people-poured-sewage-waste-in-front-of-gram-panchayat-mrq/articleshow-52c4f6l"/>
        </item>
        <item>
            <title><![CDATA[ಲಕ್ಕುಂಡಿ ಗ್ರಾ. ಪಂಚಾಯಿತಿಯಲ್ಲಿ ದಿಢೀರ್ ಬದಲಾವಣೆ; ಆಡಳಿತಾಧಿಕಾರಿ, PDO ವರ್ಗಾವಣೆ]]></title>
            <link>https://kannada.asianetnews.com/karnataka-districts/gadag-taluk-lakkundi-gram-panchayat-administrator-pdo-transfer-mrq/articleshow-52kq8gq</link>
            <guid isPermaLink="true">https://kannada.asianetnews.com/karnataka-districts/gadag-taluk-lakkundi-gram-panchayat-administrator-pdo-transfer-mrq/articleshow-52kq8gq</guid>
            <pubDate>Thu, 13 Aug 2026 07:48:04 +0530</pubDate>
            <description><![CDATA[&lt;p&gt;ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂಲ ಸೌಲಭ್ಯಗಳ ವೈಫಲ್ಯವನ್ನು ಖಂಡಿಸಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಆಡಳಿತಾಧಿಕಾರಿ ಹಾಗೂ ಪಿಡಿಒ ಅವರನ್ನು ವರ್ಗಾವಣೆಗೊಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzwed1mv7ear02dbcyksv2ge,imgname-lakkundi-1786587285147.jpg" type="image/jpeg" height="390" width="690"/>
            <content:encoded><![CDATA[&lt;p&gt;ಗದಗ: ತಾಲೂಕಿನ ಲಕ್ಕುಂಡಿ ಗ್ರಾಮಕ್ಕೆ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಆಡಳಿತಾಧಿಕಾರಿಗಳು ಮತ್ತು ಪಿಡಿಒ ಅವರ ವೈಫಲ್ಯ ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆ ಆಡಳಿತಾಧಿಕಾರಿಯ ಕರ್ತವ್ಯ ಬಿಡುಗಡೆ ಹಾಗೂ ಪಿಡಿಒ ಅವರ ವರ್ಗಾವಣೆಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಜನಗಿ ಆದೇಶಿಸಿದರು.&lt;/p&gt;&lt;p&gt;ಈ ಕುರಿತು ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತ ಆಡಳಿತಾಧಿಕಾರಿಗಳ ಬದಲಾವಣೆಗೆ ಪಟ್ಟು ಹಿಡಿದಿದ್ದರು. ತಾಪಂ ಇಒ ಡಾ. ಎಚ್.ಎಸ್. ಜನಗಿ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು.&lt;/p&gt;&lt;h2&gt;&lt;strong&gt;ಆಡಳಿತ ನಡೆಸುವ ವಿಫಲತೆ&lt;/strong&gt;&lt;/h2&gt;&lt;p&gt;ಅಸಮರ್ಪಕ ಕುಡಿಯುವ ನೀರು, ಅವೈಜ್ಞಾನಿಕ ಜೆಜೆಎಂ ಕಾಮಗಾರಿ, ರಸ್ತೆಗಳ ಅಸ್ವಚ್ಛತೆ, ಬೀದಿದೀಪ, ರಾಜಬೀದಿ ದುರಸ್ತಿ, ಸಿಬ್ಬಂದಿಯ ವಿಳಂಬ ವೇತನ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಆಡಳಿತ ನಡೆಸುವ ವಿಫಲತೆಯನ್ನು ಎತ್ತಿ ತೋರಿಸಿದಾಗ ಮನವೊಲಿಕೆಗೆ ಆಗಮಿಸಿದ್ದ ಅಧಿಕಾರಿಗಳು ತಕ್ಷಣವೇ ಆಡಳಿತಾಧಿಕಾರಿ ಶರಣು ಗೋಗೇರಿ ಅವರಿಂದ ಕರ್ತವ್ಯ ಬಿಡುಗಡೆಯ ಪತ್ರ ಹಾಗೂ ಪಿಡಿಒ ಅಮೀರನಾಯಕ ಅವರಿಂದ ವರ್ಗಾವಣೆ ಮನವಿ ಪತ್ರವನ್ನು ಪಡೆದರು.&lt;/p&gt;&lt;p&gt;ನಂತರ ಮಾತನಾಡಿದ ಅವರು, ಜಿಪಂ ಹಾಗೂ ತಾಪಂನಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಸೇರಿದಂತೆ ಅಧಿಕ ಅನುದಾನವಿದ್ದು, ಅವುಗಳನ್ನು ಸಮರ್ಪಕ ಬಳಕೆ ಮಾಡುವುದರೊಂದಿಗೆ ಐತಿಹಾಸಿಕ ಲಕ್ಕುಂಡಿ ಗ್ರಾಮದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುವುದು ಎಂದರು.&lt;/p&gt;&lt;h3&gt;&lt;strong&gt;6 ತಿಂಗಳಿಂದ ಗ್ರಾಮದ ಅಭಿವೃದ್ಧಿ ಹಿನ್ನಡೆ&lt;/strong&gt;&lt;/h3&gt;&lt;p&gt;ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಪಂ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ, ತಾಪಂ ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ ಹಾಗೂ ನಜೀರಅಹ್ಮದ ಕಿರಿಟಗೇರಿ ಮಾತನಾಡಿ, ಕಳೆದ 6 ತಿಂಗಳಿಂದ ಗ್ರಾಮದ ಅಭಿವೃದ್ಧಿ ಹಿನ್ನಡೆ ಹಾಗೂ ಇಬ್ಬರು ಅಧಿಕಾರಿಗಳ ಸಮನ್ವಯ ಕೊರತೆ ಕುರಿತು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.&lt;/p&gt;&lt;p&gt;ಹಲವಾರು ಸಲ ಗ್ರಾಮದ ಹಲವಾರು ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳಿಗೂ ಸಹ ತಿಳಿಸಿದರೂ ಕಾಳಜಿ ವಹಿಸಿರಲಿಲ್ಲ. ಆದ್ದರಿಂದ ಆಡಳಿತ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕೆಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸ್ಥಳಕ್ಕೆ ಆಗಮಿಸಿದ ತಾಪಂ ಅಧಿಕಾರಿಗಳು ಪರಿಸ್ಥಿತಿಯ ಗಂಭಿರತೆಯನ್ನು ಅರಿತು ಇಬ್ಬರು ಅಧಿಕಾರಿಗಳನ್ನು ಹಿಂಪಡೆದು ನೂತನ ಅಧಿಕಾರಿಗಳನ್ನು ನೇಮಕ ಮಾಡುವ ಭರವಸೆ ನೀಡಿದ್ದಾರೆ. ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ಬಗ್ಗೆ ವಿಶೇಷ ಕಾಳಜಿ ವಹಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.&lt;/p&gt;&lt;p&gt;ಶಿವಪ್ಪ ಸಜ್ಜನರ, ಗ್ರಾಪಂ ಮಾಜಿ ಸದಸ್ಯ ಬಿ.ಬಿ. ಮಾಡಲಗೇರಿ, ಮರಿಯಪ್ಪ ವಡ್ಡರ, ಕಳಕೇಶ ಟೆಂಗಿನಕಾಯಿ, ಚಂದ್ರಗೌಡ ಪಾಟೀಲ, ಚನ್ನಪ್ಪ ಹುಬ್ಬಳ್ಳಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಮಂಜುನಾಥ ತಡಹಾಳ, ಬಸವರಾಜ ಕುಂಬಾರ, ವೀರಣ್ಣ ಅರಹುಣಶಿ, ಶಿವಪ್ಪ ಭಜಂತ್ರಿ, ರವಿ ಕವಲೂರು ಇತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಗ್ರಾಮವನ್ನು ದೇವಸ್ಥಾನಕ್ಕೆ ದಾನ ನೀಡಿದ ಮಾಹಿತಿ ವಿಜಯನಗರ ಕಾಲದ ಶಾಸನ ಕಂಪ್ಲಿಯಲ್ಲಿ ಪತ್ತೆ&lt;/strong&gt;&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-taluk-lakkundi-gram-panchayat-administrator-pdo-transfer-mrq/articleshow-52kq8gq"/>
        </item>
        <item>
            <title><![CDATA[ಅಪ್ಪಾ ಐ ಲವ್ ಯೂ ಪಾ.., ಅನ್ನೋ ಮಗುವನ್ನ ಬೈಕ್ ಸೈಡ್ ಬ್ಯಾಗ್‌ನಲ್ಲಿ ಕೂರಿಸಿದ ಬೆಪ್ಪ! ಮುಂದೇನಾಯ್ತು ನೀವೇ ನೋಡ್ರಪ್ಪ..]]></title>
            <link>https://kannada.asianetnews.com/viral/gadag-father-puts-child-in-bike-side-bag-karnataka-police-case-viral-photo/articleshow-55nnuk9</link>
            <guid isPermaLink="true">https://kannada.asianetnews.com/viral/gadag-father-puts-child-in-bike-side-bag-karnataka-police-case-viral-photo/articleshow-55nnuk9</guid>
            <pubDate>Thu, 25 Jun 2026 12:50:43 +0530</pubDate>
            <description><![CDATA[ಗದಗದಲ್ಲಿ ತಂದೆಯೊಬ್ಬ ತನ್ನ ಮಗುವನ್ನು ಬೈಕ್&zwnj;ನ ಸೈಡ್ ಬ್ಯಾಗ್&zwnj;ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಈ ಬೇಜವಾಬ್ದಾರಿ ಕೃತ್ಯಕ್ಕಾಗಿ ಪೊಲೀಸರು ಆತನನ್ನು ಪತ್ತೆಹಚ್ಚಿ, ದಂಡ ವಿಧಿಸಿ, ಮಗುವಿನ ಸುರಕ್ಷತೆಯ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvytd2n4rzvwxbvmb5zy3k9b,imgname-gadag-father-puts-child-in-bike-side-bag-1782372010660.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜೂ.25): ಹೆ&lt;/strong&gt;ತ್ತವರಿಗೆ ತಮ್ಮ ಮಕ್ಕಳೇ ಪ್ರಾಣಕ್ಕಿಂತ ಹೆಚ್ಚು. ಮಕ್ಕಳ ಸುರಕ್ಷತೆಗಾಗಿ ಪೋಷಕರು ಎಷ್ಟೇ ಕಷ್ಟ ಬಂದರೂ ಎದುರಿಸುತ್ತಾರೆ. ಆದರೆ, ಗದಗ ಜಿಲ್ಲೆಯಲ್ಲಿ ತಂದೆಯೊಬ್ಬನ ಅತಿರೇಕದ ವರ್ತನೆ ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು ಪ್ರೀತಿಯಿಂದ ಎತ್ತಿಕೊಳ್ಳುವ ಬದಲು, ಬೈಕ್&zwnj;ನ ಲಗೇಜ್ ಇಡುವ ಸೈಡ್ ಬ್ಯಾಗ್&zwnj;ನಲ್ಲಿ ಮಗುವನ್ನು ಕೂರಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಗದಗ ನಗರದ ಟಿಪ್ಪು ಸರ್ಕಲ್&zwnj;ನಿಂದ ಡಿಸಿ ಕಚೇರಿ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ, ತನ್ನ ಪುಟ್ಟ ಕಂದಮ್ಮನನ್ನು ಬೈಕ್&zwnj;ನ ಸೈಡ್ ಪ್ಯಾಕೆಟ್&zwnj;ನಲ್ಲಿ (ಲಗೇಜ್ ಬ್ಯಾಗ್) ಲಗೇಜಿನಂತೆ ತುರುಕಿದ್ದನು. ಮಗು ಆ ಬ್ಯಾಗ್&zwnj;ನೊಳಗೆ ಇಕ್ಕಟ್ಟಿನಲ್ಲಿ ಕುಳಿತಿದ್ದು, ಮಗುವಿನ ತಲೆ ಮಾತ್ರ ಹೊರಗೆ ಕಾಣುತ್ತಿತ್ತು. ಈ ದೃಶ್ಯವನ್ನು ನೋಡಿದ ದಾರಿಹೋಕರು ತಕ್ಷಣ ಇದನ್ನು ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.&lt;/p&gt;&lt;h2&gt;&lt;strong&gt;ವೈರಲ್ ಆದ ಫೋಟೋ, ಪೊಲೀಸರ ಎಂಟ್ರಿ:&lt;/strong&gt;&lt;/h2&gt;&lt;p&gt;ಈ ಬೇಜವಾಬ್ದಾರಿ ತಂದೆಯ ಫೋಟೋ ಕ್ಷಣಾರ್ಧದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಗದಗ ಪೊಲೀಸರು, ಬೈಕ್ ಸಂಖ್ಯೆಯ ಆಧಾರದ ಮೇಲೆ ವ್ಯಕ್ತಿಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಪೇಟೆಗೆ ಹೋಗಿ ವಾಪಸ್ ಬರುವಾಗ ಈ ರೀತಿ ಮಾಡಿರುವುದಾಗಿ ವ್ಯಕ್ತಿ ಸಮರ್ಥನೆ ನೀಡಿದ್ದಾನೆ ಎನ್ನಲಾಗಿದೆ. ಆದರೆ, ಮಗುವಿನ ಜೀವದ ಜೊತೆ ಚೆಲ್ಲಾಟವಾಡಿದ ಈತನಿಗೆ ಪೊಲೀಸರು ಸರಿಯಾಗಿ ಬುದ್ಧಿ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ದಂಡ ಮತ್ತು ಎಚ್ಚರಿಕೆ:&lt;/strong&gt;&lt;/h2&gt;&lt;p&gt;ಪೊಲೀಸರು ಈ 'ಬೆಪ್ಪ' ಅಪ್ಪನಿಗೆ ಭಾರೀ ದಂಡ ವಿಧಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಕೃತ್ಯವೆಸಗಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸಣ್ಣದೊಂದು ಆಯತಪ್ಪಿದರೂ ಮಗುವಿನ ಜೀವಕ್ಕೆ ಅಪಾಯವಿತ್ತು ಎಂದು ಸಾರ್ವಜನಿಕರು ಈತನ ಹುಚ್ಚಾಟದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೋಟಾರು ವಾಹನ ಕಾಯ್ದೆ ಮಾತ್ರವಲ್ಲದೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಲೂ ಇದೊಂದು ಗಂಭೀರ ಅಪರಾಧವಾಗಿದೆ.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/viral/gadag-father-puts-child-in-bike-side-bag-karnataka-police-case-viral-photo/articleshow-55nnuk9"/>
        </item>
        <item>
            <title><![CDATA[ಎಚ್.ಕೆ. ಪಾಟೀಲ ಹೆಸರಿನಲ್ಲೇ ಮೂರು ಮತ: ಸಂಸದ ಬೊಮ್ಮಾಯಿ ಸ್ಫೋಟಕ ಆರೋಪ]]></title>
            <link>https://kannada.asianetnews.com/karnataka-districts/mp-basavaraj-bommai-voter-list-duplicate-votes-hk-patil-gvd/articleshow-8ca5fqr</link>
            <guid isPermaLink="true">https://kannada.asianetnews.com/karnataka-districts/mp-basavaraj-bommai-voter-list-duplicate-votes-hk-patil-gvd/articleshow-8ca5fqr</guid>
            <pubDate>Sat, 04 Jul 2026 20:51:29 +0530</pubDate>
            <description><![CDATA[&lt;p&gt;ಮಾಜಿ ಸಚಿವ ಎಚ್.ಕೆ.ಪಾಟೀಲರ ಹೆಸರಿನಲ್ಲೇ ಮೂರು ಮತಗಳಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಬಾಂಬ್ ಸಿಡಿಸಿದ್ರು. ಗದಗನಲ್ಲಿ ಮಾತನಾಡಿದ ಅವ್ರು, ಮ್ಯಾಪಿಂಗ್ ಆದಾಗಿಯೂ ಕೂಡ ಕೆಲ ಹೆಸರುಗಳು..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwpvdd5y524eh8yd74vmka8q,imgname-vj-1783178376382.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.04): &lt;/strong&gt;ಮಾಜಿ ಸಚಿವ ಎಚ್.ಕೆ.ಪಾಟೀಲರ ಹೆಸರಿನಲ್ಲೇ ಮೂರು ಮತಗಳಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಬಾಂಬ್ ಸಿಡಿಸಿದ್ರು. ಗದಗನಲ್ಲಿ ಮಾತನಾಡಿದ ಅವ್ರು, ಮ್ಯಾಪಿಂಗ್ ಆದಾಗಿಯೂ ಕೂಡ ಕೆಲ ಹೆಸರುಗಳು ಮತ್ತೆ ಮತದಾರರ ಪಟ್ಟಿಯಲ್ಲಿ ಕಂಡು ಬಂದಿವೆ. ಈ ಬಗ್ಗೆ ತಹಶೀಲ್ದಾರ್ ಅವರಿಗೆ ತಿಳಿಸಿದರೂ ಗಂಭೀರವಾಗಿ ತೆಗೆದುಕೊಂಡಿಲ್ಲ.&lt;/p&gt;&lt;p&gt;ಹುಲಕೋಟಿಯ ಬೂತ್ ನಂಬರ್ 143ರ ಕ್ರಮ ಸಂಖ್ಯೆ 161, 183 ಹಾಗೂ 153 ನೇ ಬೂತ್ ನಂಬರ್ ನಲ್ಲಿ 393 ಕ್ರಮ ಸಂಖ್ಯೆಯಲ್ಲಿ ಹನಂಮತಗೌಡ ಕೃಷ್ಣಗೌಡ ಪಾಟೀಲ ಅಂತಾ ಹೆಸರಿದೆ. ಒಬ್ಬ ಪ್ರಖ್ಯಾತ ಹೆಸರೇ ಮೂರು ಬಾರಿ ಬಂದ್ರೆ ಯಾವ ರೀತಿ ಪರಿಷ್ಕರಣೆ ಆಗ್ತಿದೆ ಅಂತಾ ಪ್ರಶ್ನೆ ಮೂಡಿದೆ ಅಂತಾ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಇನ್ನು ರೋಣ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲೂ ಹೆಸರು ರಿಪೀಟ್ ಆಗಿದೆ. ರೋಣದಲ್ಲಿ ಅಲ್ಲಾ ಸಾಬ್ ಎಂಬ ವ್ಯಕ್ತಿಯ ಹೆಸರು ಐದು ಕಡೆ ನಮೂದಿದೆ.&lt;/p&gt;&lt;h2&gt;&lt;strong&gt;ಬಿಎಲ್&zwnj;ಒಗಳು ಸರಿಯಾಗಿ ಬರ್ತಿಲ್ಲ&lt;/strong&gt;&lt;/h2&gt;&lt;p&gt;ನಮಗೆ ಕಂಡಂತೆ ರೋಣ ಮತಕ್ಷೇತ್ರದಲ್ಲಿ 3084 ಹೆಸರುಗಳು ರಿಪೀಟ್ ಆಗಿವೆ. ಗದಗ ಮತ ಕ್ಷೇತ್ರದಲ್ಲಿ 2305 ಹೆಸರುಗಳು ಡಬಲ್ ತ್ರಿಬಲ್ ಇದೆ. ಮತದಾನ ಪರಿಷ್ಕರಣೆಯ ಕೆಲಸ ಆಗ್ಬೇಕು. ಆದ್ರೆ ಸಮರ್ಪಕವಾಗಿ ಕೆಲಸ ಆಗಿಲ್ಲ. ಬಿಎಲ್&zwnj;ಒಗಳು ಸರಿಯಾಗಿ ಬರ್ತಿಲ್ಲ. ಅಧಿಕಾರಿಗಳಿಗೆ ಸರಿಯಾಗಿ ಟ್ರೇನಿಂಗ್ ಕೂಡ ಆಗಿಲ್ಲ. ಜನರನ್ನ ಬಿಟ್ಟು ಅಂಜುಮನ್ ಇಸ್ಲಾಂ ಮಸೀದಿಯಲ್ಲಿ ನಮೂನೆಗಳನ್ನ ತುಂಬಿಸ್ತಿದ್ದಾರೆ. ಒಂದು ವರ್ಗದ ಜನಕ್ಕೆ ಫ್ರೀ ಬಿಟ್ಟಿದ್ದಾರೆ ಅಂತಾ ಬೊಮ್ಮಾಯಿ ಆರೋಪಿಸಿದ್ರು.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-basavaraj-bommai-voter-list-duplicate-votes-hk-patil-gvd/articleshow-8ca5fqr"/>
        </item>
        <item>
            <title><![CDATA[ಗದಗದಲ್ಲಿ ವೀರೇಶ್ವರ ಪುಣ್ಯಾಶ್ರಮ ಜಾತ್ರೆ ಸಂಭ್ರಮ: ಮಳೆಯ ನಡುವೆ ರಥೋತ್ಸವಕ್ಕೆ ಭಕ್ತರ ಜಯಘೋಷ]]></title>
            <link>https://kannada.asianetnews.com/festivals/veereshwara-punyashrama-jatre-gadag-music-devotional-festival-gvd/articleshow-arxci08</link>
            <guid isPermaLink="true">https://kannada.asianetnews.com/festivals/veereshwara-punyashrama-jatre-gadag-music-devotional-festival-gvd/articleshow-arxci08</guid>
            <pubDate>Sun, 05 Jul 2026 23:50:24 +0530</pubDate>
            <description><![CDATA[&lt;p&gt;Gadag: ಇಲ್ಲಿನ ವೀರೇಶ್ವರ ಪುಣ್ಯಾಶ್ರಮದ ಜಾತ್ರೆ ಅಂದ್ರೆ ಅದು ಬರೀ ಜನ ಜಂಗುಳಿಯ ಜಾತ್ರೆಯಲ್ಲ. ಅದು ಸಂಗೀತದ ಜಾತ್ರೆ. ಕಲಾವಿದರ, ಕಲೆಯ ಸಂಭ್ರಮದ ಉತ್ಸವ&zwnj;. ಹೌದು! ಐದು ದಿನಗಳ ಕಾಲ ನಡೆಯುವ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwspteyrxkhv08pkmmk023t1,imgname-vjv-1783274224600.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗಿರೀಶ್ ಕಮ್ಮಾರ, ಏಷ್ಯಾನೆಟ್ ಸುವರ್ಣ ನ್ಯೂಸ್, ಗದಗ&lt;/strong&gt;&lt;/p&gt;&lt;p&gt;&lt;strong&gt;ಗದಗ (ಜು.05):&lt;/strong&gt; ಇಲ್ಲಿನ ವೀರೇಶ್ವರ ಪುಣ್ಯಾಶ್ರಮದ ಜಾತ್ರೆ ಅಂದ್ರೆ ಅದು ಬರೀ ಜನ ಜಂಗುಳಿಯ ಜಾತ್ರೆಯಲ್ಲ. ಅದು ಸಂಗೀತದ ಜಾತ್ರೆ. ಕಲಾವಿದರ, ಕಲೆಯ ಸಂಭ್ರಮದ ಉತ್ಸವ&zwnj;. ಹೌದು! ಐದು ದಿನಗಳ ಕಾಲ ನಡೆಯುವ ಜಾತ್ರೆಯುದ್ದಕ್ಕೂ ಆದ್ಮ್ಯಾತ್ಮದ ಜೊತೆಗೆ ರಂಗಭೂಮಿ, ಹಿಂದೂಸ್ತಾನಿ ಸಂಗೀತದ ಘಮ ಪಸರಿಸಿರುತ್ತೆ. ಗಾನಗಂಧರ್ವ ಪಂಡಿತ ಪುಟ್ಟರಾಜರ ತಪೋ ಭೂಮಿ ಗದಗದಲ್ಲಿ ಈ ಬಾರಿ ಮಳೆ ಮಧ್ಯೆ ನಡೆದ ಜಾತ್ರೆ ವಿಶೇಷ ಅನುಭೂತಿ ನೀಡಿದೆ.&lt;/p&gt;&lt;p&gt;ಪ್ರತಿ ವರ್ಷ ಲಿಂಗೈಕ್ಯ ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಲಿಂಗೈಕ್ಯ ಪಂಡಿತ ಪುಟ್ಟರಾಜ ಕವಿಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಈ ಜಾತ್ರೆ ನಡೆಸಲಾಗುತ್ತೆ. ಈ ಬಾರಿ ರಥ ಸಾಗುತ್ತಿದ್ದಂತೆ ಮಳೆಯ ಸಿಂಚನವಾಗಿದ್ದು ಭಕ್ತರನ್ನ ಪುಳಕಿತಗೊಳಿಸಿದೆ. ಜನ ರಥದತ್ತ ಉತ್ತತ್ತಿ ಎಸೆದು ಭಕ್ತಿ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಜಿಟಲ್ ಜೊತೆ ಮಾತನಾಡಿದ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ನಾಡಿಗೆ ಮಳೆ ಬೆಳೆಯೊಂದಿಗೆ ಸುಖ ಸಮೃದ್ಧಿ ಸಿಗಲಿ ಅಂತಾ ಪ್ರಾರ್ಥಿಸುತ್ತೇನೆ ಎಂದ್ರು&zwnj;.&lt;/p&gt;&lt;p&gt;ಪಂಚಾಕ್ಷರ ಗವಾಯಿಗಳು, ಪುಟ್ಟರಾಜ ಗವಾಯಿಗಳ ಗದ್ದಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದು ಗಮನ ಸೆಳೆಯುವಂತಿದೆ&zwnj;. ರಥ ಸಾಗಿ ಬಂದ ನಂತರ ನಿರಂತರ ಸಂಗೀತ ಸೇವೆ ಆರಂಭವಾಗುತ್ತೆ. ಅಂದ್ರೆ ಮರುದಿನ ಬೆಳಗಿನ ಜಾವದವರೆಗೂ ಅಖಂಡ ಸಂಗೀತ ಸೇವೆಯನ್ನ ನಾಡಿನ ಹೆಸರಾಂತ ಕಲಾವಿದರು ನಡೆಸಿಕೊಡುತ್ತಾರೆ. ಹಿಂದೂಸ್ತಾನಿ ಸಂಗೀತ ಕ್ಷೇತ್ರ ಹಾಗೂ ರಂಗಭೂಮಿಗೆ ವೀರೇಶ್ವರ ಪುಣ್ಯಾಶ್ರಮ ಮುತ್ತು ರತ್ನಗಳಂಥ ಕಲಾವಿದರನ್ನ ನೀಡಿ, ಪೋಷಿಸಿದೆ.&lt;/p&gt;&lt;h2&gt;&lt;strong&gt;ಗಂಧರ್ವ ಲೋಕ ಸೃಷ್ಟಿ&lt;/strong&gt;&lt;/h2&gt;&lt;p&gt;ಹೀಗಾಗಿ ಈ ಜಾತ್ರೆಯಲ್ಲಿ ಕಲಾವಿದರ ದಂಡೆ ಹರಿದು ಬರುತ್ತದೆ. ಒಂದ್ಕಡೆ ಕಲಾಮೇಳಗಳ ಮಧ್ಯೆ ರಥ ಸಾಗ್ತಿದ್ರೆ ಮತ್ತೊಂದ್ಕಡೆ ಸಂಗೀತ ಕಲಾವಿದರು ತಮ್ಮ ಕಲೆಯನ್ನ ಪ್ರದರ್ಶನ ಮಾಡ್ತಾರೆ. ವೃತ್ತಿರಂಗ ಭೂಮಿಯ ದಿಗ್ಗಜ ಕಲಾವಿದರೂ ಜಾತ್ರೆಗೆ ಬಂದು ಸಂಭ್ರಮಿಸಿದರು. ಅಜ್ಜನ ಜಾತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಷ್ಟೇ ಅಲ್ದೆ ಮುಂಬೈ, ಪುಣೆ, ದೆಹಲಿ, ಕೊಲ್ಕತ್ತಾ, ಗೋವಾ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳ ಹೆಸರಾಂತ ಸಂಗೀತ ಕಲಾವಿದ್ರು, ಅಪಾರ ಸಂಖ್ಯೆಯ ಭಕ್ತರು ಆಗಮಿಸ್ತಾರೆ. ಕಲಾವಿದರ ಸಂಚಾರದಿಂದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಂಧರ್ವ ಲೋಕ ಸೃಷ್ಟಿಯಾಗಿರುತ್ತೆ.&lt;/p&gt;]]></content:encoded>
            <category>gadag</category>
            <dc:creator>Govindaraj S</dc:creator>
            <atom:link href="https://kannada.asianetnews.com/festivals/veereshwara-punyashrama-jatre-gadag-music-devotional-festival-gvd/articleshow-arxci08"/>
        </item>
        <item>
            <title><![CDATA[Rahul Gandhi Missing: ರಾಹುಲ್ ಗಾಂಧಿ ನಾಪತ್ತೆಯಾಗಿರೋಕೆ ಸಂಪುಟ ವಿಸ್ತರಣೆ ವಿಳಂಭ? ಪ್ರಲ್ಹಾದ್ ಜೋಶಿ ಹೇಳಿಕೆ ವೈರಲ್]]></title>
            <link>https://kannada.asianetnews.com/politics/karnataka-govt-cabinet-expansion-delayed-due-to-rahul-missing-pralhad-joshi-criticizes-rav/articleshow-bgtxke4</link>
            <guid isPermaLink="true">https://kannada.asianetnews.com/politics/karnataka-govt-cabinet-expansion-delayed-due-to-rahul-missing-pralhad-joshi-criticizes-rav/articleshow-bgtxke4</guid>
            <pubDate>Sun, 12 Jul 2026 05:25:46 +0530</pubDate>
            <description><![CDATA[ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ರಾಹುಲ್ ಗಾಂಧಿ 40 ದಿನಗಳ ಕಾಲ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಮತದಾರರ ಪರಿಷ್ಕರಣೆ ಮತ್ತು ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಸರ್ಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01knhhjx5p4f2zsycpnn9zjadz,imgname-pralhad-joshi-1775484105909.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.12) : &lt;/strong&gt;ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul gandhi) ಕಳೆದ 40 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಕಾಣೆ ಆಗಿದ್ದರಿಂದಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಆದರೆ, ರಾಜ್ಯ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಯಲ್ಲೇ ಮಗ್ನರಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.&lt;/p&gt;&lt;h2&gt;SIR ಗೆ ಕರ್ನಾಟಕ ಸರ್ಕಾರ ಅನಗತ್ಯ ಗೊಂದಲ&lt;/h2&gt;&lt;p&gt;ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶೇಷ ಮತದಾರರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ರಾಜ್ಯ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಷ್ಟದ ಪರಿಸ್ಥಿತಿಯಲ್ಲೂ ಬಿಎಲ್&zwnj;ಒಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಮತದಾರರ ನೋಂದಣಿ ನಮೂನೆಗಳು ಮನೆ ಮನೆಗೆ ತಲುಪುವಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು.&lt;/p&gt;&lt;h3&gt;ಶಾಶ್ವತ ನಿವಾಸ ಪ್ರಮಾಣಪತ್ರ ಕಾನೂನು ಬಾಹಿರ&lt;/h3&gt;&lt;p&gt;ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ನುಸುಳುಕೋರರಿಗೆ ಮತದಾರರ ಗುರುತಿನ ಚೀಟಿ ದೊರಕಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಮಾಣಪತ್ರ ನೀಡಲು ಸರ್ಕಾರ ವಿಧಿಸಿರುವ 11 ಷರತ್ತುಗಳೂ ಸಮಂಜಸವಾಗಿಲ್ಲ ಎಂದು ಜೋಶಿ ಆಕ್ಷೇಪ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-govt-cabinet-expansion-delayed-due-to-rahul-missing-pralhad-joshi-criticizes-rav/articleshow-bgtxke4"/>
        </item>
        <item>
            <title><![CDATA[Bidadi Township Row: ಡಿಕೆಶಿ ರಾಜ್ಯದ ಸಿಎಂ ಆಗಿ ಯೋಜನೆ ರೂಪಿಸಬೇಕು, ರಿಯಲ್ ಎಸ್ಟೇಟ್ ಏಜಂಟರಾಗಿ ಅಲ್ಲ: ವಿಜಯೇಂದ್ರ ಕಿಡಿ]]></title>
            <link>https://kannada.asianetnews.com/politics/by-vijayendra-slams-cm-dk-shivakumar-bidadi-township-protest-rav/articleshow-dxbmw6b</link>
            <guid isPermaLink="true">https://kannada.asianetnews.com/politics/by-vijayendra-slams-cm-dk-shivakumar-bidadi-township-protest-rav/articleshow-dxbmw6b</guid>
            <pubDate>Thu, 16 Jul 2026 12:16:20 +0530</pubDate>
            <description><![CDATA[&lt;p&gt;BY Vijayendra Slams CM DK Shivakumar ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸಿಎಂ ತಮ್ಮ ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಕನಕಪುರಕ್ಕೆ ವಿಮಾನ ನಿಲ್ದಾಣ ನಿರ್ಮಿಸುತ್ತಿದ್ದಾರೆ ಮತ್ತು ಬಿಡದಿ ಟೌನ್&zwnj;ಶಿಪ್&zwnj;ಗಾಗಿ ರೈತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxmt2saz27q505eqzvymsnnn,imgname-----------------------2026-07-16t120308.182-1784183612767.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.16)&lt;/strong&gt;: ಸಿಎಂ ತಮ್ಮ ರಿಯಲ್ ಎಸ್ಟೇಟ್ ದಂಧೆಗಾಗಿ ಕನಕಪುರಕ್ಕೆ ಏರ್ ಪೋರ್ಟ್ ತೆಗೆದುಕೊಂಡು ಹೊರಟಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ(BJP State president BY Vijayendra) ಆರೋಪಿಸಿದ್ರು..&lt;/p&gt;&lt;p&gt;ಗದಗನಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯಕ್ಕೆ ಎರಡನೇ ಏರ್ ಪೋರ್ಟ್ ಬೇಕು ಅಂತಾ ಅದನ್ನೂ ಕನಕಪುರಕ್ಕೆ ತೆಗೆದುಕೊಂಡಿದ್ದಾರೆ. ಕನಕಪುರದ ಬದಲು ತುಮಕೂತು ಆಸುಪಾಸು ಏರ್ ಪೋರ್ಟ್ ತಂದಲ್ಲಿ ಮಧ್ಯ ಕರ್ನಾಟಕಕ್ಕೆ ಲಾಭ. ಜೊತೆಗೆ ಉತ್ತರ ಕರ್ನಾಟಕಕ್ಕೂ ಲಾಭವಾಗಲಿದೆ. ಕೈಗಾರಿಗೆ ಬರುತ್ತೆ ಉದ್ಯೋಗ ಅವಕಾಶ ಸೃಷ್ಟಿಯಾಗುತ್ತದೆ ಅಂತಾ ಅಭಿಪ್ರಾಯ ಪಟ್ಟರು.&lt;/p&gt;&lt;h2&gt;ತುಂಗಭದ್ರಾ ಗೇಟ್ ರಿಪೇರಿಗೆ 24 ತಿಂಗಳು, ಟೌನ್&zwnj;ಶಿಪ್&zwnj;ಗೆ 24 ಗಂಟೆಯೊಳಗೆ!&lt;/h2&gt;&lt;p&gt;ಇನ್ನು ಬಿಡದಿ ಟೌನ್ ಶಿಪ್ ಬಗ್ಗೆ ಮಾತ್ನಾಡಿದ ಬಿವೈವಿ, ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ರಿಪೇರಿ 24 ತಿಂಗಳು ಬೇಕಾಯ್ತು, ಆದ್ರೆ ಅಧಿಕಾರ ವಹಿಸಿಕೊಂಡು 24 ಗಂಟೆಯಲ್ಲೇ ಬಿಡದಿ ಫಲವತ್ತಾದ ಜಮೀನು ಕಿತ್ತುಕೊಳ್ಳುವ ದುಸ್ಸಾಹಸ ಮಾಡಿದ್ದಾರೆ ಅಂದ್ರು..&lt;/p&gt;&lt;h3&gt;ರೈತರ ಮನೆಗಳಿಗೆ ನುಗ್ಗಿ ಗೂಂಡಾಗಳಿಂದ ಬೆದರಿಕೆ!&lt;/h3&gt;&lt;p&gt;ರೈತರಿಂದ ಬಲವಂತವಾಗಿ ಜಮೀನು ಕಸೆಯುವುದಿಲ್ಲ ಅಂತಾ ಹೇಳ್ತಾರೆ ಸಿಎಂ ಹೇಳ್ತಾರೆ.. ಆದ್ರೆ ವಾಸ್ತವವಾಗಿ ರೈತರ ಮನೆಗೆ ರಾತ್ರಿ ಗೂಂಡಾಗಳು ನುಗ್ಗಿ, ಜಮೀನನ್ನ ಬಿಟ್ಟುಕೊಡಬೇಕು ಅಂತಾ ಧಮ್ಕಿ ಹಾಕ್ತಾರೆ ಅಂತಾ ರೈತರು ಹೇಳ್ತಿದ್ದಾರೆ.. ಆದ್ರೆ ಈ ಮಧ್ಯೆ ರೈತರು ಕೊಟ್ಟರೇ ಪಾತ್ರ ಜಮೀನು ಪಡೀತೆವೆ ಅಂತಾ ಸಿಎಂ ಕಪಟ ನಾಟಕ ಮಾಡ್ತಾರೆ ಅಂತಾ ಆಕ್ರೋಶಹೊರ ಹಾಕಿದ್ರು.. ಸಿಎಂ ಆದಮೇಲೂ ಡಿಕೆಶಿ ರಿಯಲ್ ಎಸ್ಟೇಟ್ ಧೋರಣೆಯಿಂದ ಹೊರಬರದಿರೋದು ಗೊತ್ತಾಗ್ತಿದೆ.. ನಾವು ಟೌನ್ ಶಿಪ್ ವಿರೋಧಿಸಲ್ಲ.. 70% ರೈತರು ಒಪ್ಪಿದಲ್ಲಿ ಮಾಡಬಹುದು ಎಂದರು.&lt;/p&gt;&lt;p&gt;&lt;strong&gt;ಡಿಕೆಶಿಯವ್ರೇ ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡ್ಬೇಡಿ&lt;/strong&gt;&lt;/p&gt;&lt;p&gt;ಸಿಎಂ ಬಂಧುಬಳಗವೇ ಬಿಡದಿಯಲ್ಲಿ ಸಾವಿರಾರು ಎಕರೆ ಜಮೀನು ಹೊಂದಿದ್ದಾರೆ ಅಂತಾ ರೈತರು ಮಾತನಾಡಿಕೊಳ್ಳುತ್ತಿದ್ದಾರೆ ಸಣ್ಣ ರೈತರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಅಂತಾನೂ ರೈತರು ಹೇಳ್ತಿದ್ದಾರೆ ಅಂತಾ ಹೇಳಿದ ಬಿವೈವಿ, ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡ್ಬೇಡಿ ಅಂತಾ ಸಿಎಂಗೆ ಆಗ್ರಹಿಸುತ್ತೇನೆ.. ಕುಮಾರಸ್ವಾಮಿ ಕಾಲದಲ್ಲಿ ಆರಂಭವಾಗಿದೆ ಅಂತಾ ನೆಪವೊಡ್ಡಿ ಭೂಮಿ ಕಸೆಯಬೇಡಿ.. ಹೀಗೆ ಮಾಡಿದಲ್ಲಿ, ರೈತರ ಶಾಪಕ್ಕೆ ಸರ್ಕಾರ ಬಲಿಯಾಗುತ್ತೆ ಅಂತಾ ಎಚ್ಚರಿಕೆ ನೀಡಿದ್ರು..&lt;/p&gt;&lt;p&gt;ರಾಜ್ಯದಲ್ಲಿ ಇಂಥ ಸಮಸ್ಯೆ ಇದ್ದರೂ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾರೆ.. ರಾಹುಲ್ ಗಾಂಧಿ ರೈತರ ಸಂಕಷ್ಟ ಅರಿಯಬೇಕು.. ರೈತರ ಪರ ನಿಲುವನ್ನ ರಾಹುಲ್ ಗಾಂಧಿಯವರೂ ತೆಗೆದುಕೊಳ್ಳಬೇಕು ಅಂತಾ ಆಗ್ರಹಿಸಿದ್ರು.. ಜೊತೆಗೆ ನಾಳೆ ಫ್ರೀಡಮ್ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಅಂತಾ ಹೇಳಿದ್ರು..&lt;/p&gt;&lt;p&gt;&lt;strong&gt;ರಾಜ್ಯದ ಕೃಷಿ ಸಚಿವರು ಯಾರು?&lt;/strong&gt;&lt;/p&gt;&lt;p&gt;ಕೃಷಿ ಸಚಿವರೇ ಇಲ್ಲದಿರೋದು ರಾಜ್ಯದಲ್ಲಿ ಕೃಷಿಗೆ ಆಧ್ಯತೆ ಇಲ್ಲ ಎನ್ನುವುದನ್ನ ತೋರಿಸುತ್ತದೆ.. ಬೀಕರ ಬರ ಇದೆ.. ಬಿತ್ತನೆ ಮಾಡಿದರೂ ಮೊಳಕೆಯೊಡದಿಲ್ಲ.. ಆದ್ರೆ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದರು ಸಿಎಂ ಸುಮ್ಮನಾಗಿದ್ದಾರೆ.. ಸಿಎಂ, ಸಚಿವರನ್ನ ಜಿಲ್ಲೆಗಳಿಗೆ ಕಳುಹಿಸಬೇಕು.. ವಾಸ್ತವಿಕ ಪರಿಸ್ಥಿತಿ ಅರಿತು ರಾಜ್ಯ ಸರ್ಕಾರ ಸ್ಪಂದಿಸಲಿ ಅಂತಾ ಇತ್ತಾಯಿಸಿದ ಬಿವೈವಿ, ಪತ್ರಬರೆದು ಸುಮ್ಮನೆ ಕೂತರೆ ರೈತರ ಕಣ್ಣೀರು ವರೆಸಿದಂತಾಗುವುದಿಲ್ಲ ಅಂತಾ ಹೇಳಿದ್ರು.&lt;/p&gt;&lt;p&gt;&lt;strong&gt;ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ&lt;/strong&gt;&lt;/p&gt;&lt;p&gt;ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೀತಿದೆ.. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮತೀಯ ಶಕ್ತಿಗಳಿಗೆ ಸ್ವರ್ಗದ ಹಾಗಿದೆ.. ಕೊಲೆ ದೌರ್ಜನ್ಯ ನಡೆದರೂ ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡುತ್ತಿದೆ ಎನ್ನುವಂತಾಗಿದೆ&zwnj;. ಇತ್ತೀಚೆಗೆ ಹಾವೇರಿಯಲ್ಲಿ ಪಟಾಕಿ ಸಿಡಿಸಿದ್ದರು ಅಂತಾ ಹಿಂದೂಗಳ ಮೇಲೆ ಮಾರಣಾಂತಿ ಹಲ್ಲೆ ಮಾಡಿದ್ದರು ನಡೆದಿತ್ತು.. ರಟ್ಟಿಹಳ್ಳಿಯಲ್ಲಿ ಶಿವಾಜಿ ರಾವ್ ಎನ್ನುವವರ ಹತ್ಯೆಯಾಗಿರೋದನ್ನ ನೋಡಿದ್ದೇವೆ.. ಯಲ್ಲಾಪುರದ ದಲಿತ ಮಹಿಳೆ ಹತ್ಯೆ.. ಕೊಪ್ಪಳ ಹತ್ಯೆಯಾದ ಗವಿಸಿದ್ಧಪ್ಪನಿಗೆ ನ್ಯಾಯಕ್ಕಾಗಿ ತಂದೆ ತಾಯಿ ಪ್ರತಿಭಟಿಸಿದರೇ ಮೃತ ವ್ಯಕ್ತಿಯ ಮೇಲೆ ಪೋಕ್ಸೋ ಕೇಸ್ ದಾಖಲಿಸಲಾಗಿತ್ತು.&lt;/p&gt;&lt;p&gt;ಕಾಂಗ್ರೆಸ್ ಸರ್ಕಾರ ಸಚಿವರ ಹೇಳಿಕೆಗಳು ಮತೀಯ ಶಕ್ತಿಗಳಿಗೆ ಧೈರ್ಯ ತಂದುಕೊಡುತ್ತಿದೆ.. ಅಲ್ಪ ಸಂಖ್ಯಾತರ ಓಲೈಕೆ ರಾಜಕಾರಣ ವಿರೋಧಿಸಿ ಹಾವೇರಿಯಲ್ಲಿ ಹೋರಾಟ ಹಮ್ಮಿಕೊಂಡಿದ್ದೇವೆ&zwnj; ಅಂತಾ ಮಾಹಿತಿ ನೀಡಿದ್ರು.. ಎಸ್ ಐಆರ್ ನ್ನ ಬಿಜೆಪಿ ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿದ್ದಾರೆ..ಈ ಮಧ್ಯೆ ರಾಜ್ಯ ಸರ್ಕಾರ ಖಾಯಂ ನಿವಾಸಿ ಪತ್ರ ನೀಡುತ್ತಿರುವುದು ಖಂಡನಾರ್ಹ.. ನಿನ್ನೆ ರಾಜ್ಯಪಾಲರನ್ನ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದರು&zwnj;..&lt;/p&gt;]]></content:encoded>
            <category>gadag</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/by-vijayendra-slams-cm-dk-shivakumar-bidadi-township-protest-rav/articleshow-dxbmw6b"/>
        </item>
        <item>
            <title><![CDATA[ಗದಗ: ಹಾಸ್ಟೆಲ್‌ನಲ್ಲಿ ವೈದ್ಯೆ ವಿದ್ಯಾರ್ಥಿನಿ ಶವ ಪತ್ತೆ, ಅನುಮಾನ ಹುಟ್ಟಿಸಿದ ಡೆತ್ ನೋಟ್! ಕೊರಳಿಗೆ ಹಾಕಿದ ಬಟ್ಟೆ!]]></title>
            <link>https://kannada.asianetnews.com/karnataka-districts/gadag-medical-student-dr-veena-hanapur-body-found-rural-development-university-hostel/articleshow-gqbzwhz</link>
            <guid isPermaLink="true">https://kannada.asianetnews.com/karnataka-districts/gadag-medical-student-dr-veena-hanapur-body-found-rural-development-university-hostel/articleshow-gqbzwhz</guid>
            <pubDate>Fri, 24 Jul 2026 15:03:48 +0530</pubDate>
            <description><![CDATA[&lt;p&gt;ಗದಗ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್&zwnj;ನಲ್ಲಿ, ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ. ಇದು ಆತ್ಮ೧ಹತ್ಯೆಯಲ್ಲ, ಕೊಲೆ ಎಂದು ಪೋಷಕರು ಆರೋಪಿಸಿದ್ದು, ಸಾವಿನ ಸುತ್ತ ಅನುಮಾನಗಳು ದಟ್ಟವಾಗಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky9q5xtjk84x64dbc9w40kyz,imgname-----------------------2026-07-24t145631.216-1784885213010.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.24):&lt;/strong&gt; ಹಾಸ್ಟೆಲ್ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಶವ ಪತ್ತೆಯಾದ ಆಘಾತಕಾರಿ ಘಟನೆ ಗದಗ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ನಡೆದಿದೆ.&lt;/p&gt;&lt;p&gt;ಮೃತ ವಿದ್ಯಾರ್ಥಿನಿಯನ್ನ ಡಾ ವೀಣಾ ಹಾನಾಪುರ(25) ಎಂದು ಗುರುತಿಸಲಾಗಿದೆ.&lt;/p&gt;&lt;p&gt;ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದವರಾದ ವಿದ್ಯಾರ್ಥಿನಿ ವೀಣಾ ಹಾಸ್ಟೆಲ್&zwnj;ನಲ್ಲಿದ್ದುಕೊಂಡು ಗ್ರಾಮೀಣಾಭಿವೃದ್ಧಿ ವಿವಿಯಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್(MPH) ಕೋರ್ಸ್ ಓದುತ್ತಿದ್ದರು. ಆದರೆ ಅನುಮಾನಸ್ಪದ ರೀತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.&lt;/p&gt;&lt;h2&gt;ಕೊಲೆಯೋ ಆತ್ಮ*ಹತ್ಯೆಯೋ?&lt;/h2&gt;&lt;p&gt;ನಿನ್ನೆ ರಾತ್ರಿ ಹಾಸ್ಟೆಲ್ ರೂಮ್&zwnj;ಗೆ ಹೋಗಿದ್ದ ವೀಣಾ. ರಾತ್ರಿ 11 ಗಂಟೆಯಾದರೂ ಆಚೆ ಬಾರದ ಹಿನ್ನೆಲೆ ಅನುಮಾನಗೊಂಡು ವಾರ್ಡ್ ರೂಂ ಬಾಗಿಲು ಬಡಿದ್ದಾರೆ. ಬಾಗಿಲು ತೆರೆಯದ ಹಿನ್ನೆಲೆ ಬಾಗಿಲು ಮುರಿದು ಕೋಣೆಯೊಳಗೆ ಹೋದಾಗ ಮಂಚದ ಕಂಬಿಗೆ ನೇಣುಬಿಗಿದ ಸ್ಥಿತಿ ಶವ ಪತ್ತೆಯಾಗಿದೆ.&lt;/p&gt;&lt;h3&gt;ಸಾವಿನ ಬಗ್ಗೆ ತನಿಖೆ ನಡೆಸಲು ಪೋಷಕರು ಆಗ್ರಹ&lt;/h3&gt;&lt;p&gt;ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಮಗಳು ವೈದ್ಯಳಾಬೇಕಿದ್ದು ಅವಳು ಸಾಯುವವಳಲ್ಲ. ಯಾವುದೆ ಸಮಸ್ಯೆ ಇರಲಿಲ್ಲ. ಕಾಲು ನೆಲಕ್ಕೆ ತಾಗುವಂತೆ ನೇಣುಬಿಗಿಯಲಿದೆ. ಮಗಳ ಮುಖದ ಮೇಲೆ ಗಾಯಗಳಾಗಿವೆ. ಅಲ್ಲದೆ ನೇಣುಬಿಗಿದ ಬಟ್ಟೆಯೂ ಮಗಳಿಗೆ ಸರಿದ್ದಲ್ಲ. ಮಗಳ ಶವದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು ಅದು ಮಗಳ ಹಸ್ತಾಕ್ಷರವಲ್ಲ ಎಂದು ಪೋಷಕರು ಸ್ಪಷ್ಟಪಡಿಸಿದ್ದು ಮಗಳು ಆತ್ಮ*ಹತ್ಯೆ ಮಾಡಿಕೊಂಡಿಲ್ಲ, ಕೊಲೆ ಮಾಡಲಾಗಿದೆ. ಮಗಳ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ವಿದ್ಯಾರ್ಥಿನಿಯ ತಂದೆ ರಾಮಪ್ಪ ಹಾನಾಪೂರ್ ಆಗ್ರಹಿಸಿದರು.&lt;/p&gt;&lt;p&gt;ಸದ್ಯ ಶವವನ್ನ ಮರಣೋತ್ತರ ಪರೀಕ್ಷೆಗೆ ಜಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು ಪೊಲೀಸರು ಮುಂದಿನ ತನಿಖೆ ಚುರುಕುಗೊಳಿಸಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/gadag-medical-student-dr-veena-hanapur-body-found-rural-development-university-hostel/articleshow-gqbzwhz"/>
        </item>
        <item>
            <title><![CDATA[ಗಜೇಂದ್ರಗಡದ 23 ವಾರ್ಡ್‌ಗಳಿಂದ ಪ್ರತಿದಿನ 11 ಟನ್ ಕಸ ಉತ್ಪಾದನೆ;  ಸ್ವಚ್ಛತೆಗೆ ಸಿಗದ ಆದ್ಯತೆ]]></title>
            <link>https://kannada.asianetnews.com/karnataka-districts/11-tons-of-garbage-generated-daily-from-23-wards-of-gajendragad-city-cleanliness-not-given-priority-mrq/articleshow-guvo4v3</link>
            <guid isPermaLink="true">https://kannada.asianetnews.com/karnataka-districts/11-tons-of-garbage-generated-daily-from-23-wards-of-gajendragad-city-cleanliness-not-given-priority-mrq/articleshow-guvo4v3</guid>
            <pubDate>Sat, 08 Aug 2026 08:27:48 +0530</pubDate>
            <description><![CDATA[ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆಯು ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದೇವೆ ಎಂದರೂ, ಹಲವೆಡೆ ಹೂಳು ತುಂಬಿದ ಚರಂಡಿಗಳು ಮತ್ತು ಕಸದ ರಾಶಿಗಳು ಗಬ್ಬೆದ್ದು ನಾರುತ್ತಿವೆ. ಪೌರಕಾರ್ಮಿಕರ ಕೊರತೆ ಮತ್ತು ಸಮರ್ಪಕ ತ್ಯಾಜ್ಯ ವಿಲೇವಾರಿಯ ಅಭಾವದಿಂದಾಗಿ ಪಟ್ಟಣದ ಸ್ವಚ್ಛತೆ ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗುತ್ತಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kzfms6vqtm3ndtyqnp5394cy,imgname--gajendragad--1786157767543.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಎಸ್.ಎಂ. ಸೈಯದ್&lt;/strong&gt;&lt;/p&gt;&lt;p&gt;&lt;strong&gt;ಗಜೇಂದ್ರಗಡ:&lt;/strong&gt; ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದೇವೆ ಎಂದು ಪುರಸಭೆಯವರು ಹೇಳುತ್ತಿದ್ದರೂ ಪಟ್ಟಣದ ಹಲವೆಡೆ ಕಣ್ಣಿಗೆ ಕಸದ ರಾಶಿ ರಾಚುತ್ತಿವೆ. ಬಹುತೇಕ ಚರಂಡಿಗಳು ಹೂಳು ತುಂಬಿದ್ದು, ಗಬ್ಬೆದ್ದು ನಾರುತ್ತಿವೆ.&lt;/p&gt;&lt;p&gt;ಪಟ್ಟಣದ 23 ವಾರ್ಡ್&zwnj;ಗಳಿಂದ ಪ್ರತಿದಿನ 11 ಟನ್ ಕಸ ಉತ್ಪಾದನೆ ಆಗುತ್ತಿದೆ. ನಿತ್ಯ ಪುರಸಭೆಯಿಂದ ಅಂದಾಜು 9 ಟನ್ ಕಸ ವಿಲೇವಾರಿ ಆಗುತ್ತಿದೆ. ಇನ್ನುಳಿದ 2 ಟನ್ ಕಸದಲ್ಲಿ ಚರಂಡಿಯಿಂದ ಹಾಗೂ ರಸ್ತೆಯಲ್ಲಿ ಬಿಸಾಕುವ ಕಸವಾಗಿದೆ. ಈ ಕಸ ಸಮರ್ಪಕವಾಗಿ ವಿಲೇವಾರಿ ಆಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರು.&lt;/p&gt;&lt;p&gt;ಪಟ್ಟಣದ ಬಹುತೇಕ ವಾರ್ಡಗಳಲ್ಲಿ ಕಸ ಸಂಗ್ರಹಣೆಗೆ ವಾಹನಗಳು ತೆರಳಿದರೂ ರಸ್ತೆ ಪಕ್ಕದಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ. ಪರಿಣಾಮ ಪಟ್ಟಣದ ಕೆಲ ಬಡಾವಣೆ ಹಾಗೂ ಜೋಡುರಸ್ತೆಯಲ್ಲಿ ಸಂಜೆ ಹಾಗೂ ಬೆಳಗ್ಗೆ ಕಸ ರಾಶಿಗಳು ಕಾಣುವುದು ಸಾಮಾನ್ಯ.&lt;/p&gt;&lt;h2&gt;&lt;strong&gt;ಪಟ್ಟಣದಲ್ಲಿ ಯಥೇಚ್ಛವಾಗಿ ಪ್ಲಾಸ್ಟಿಕ್ ಬಳಕೆ&lt;/strong&gt;&lt;/h2&gt;&lt;p&gt;ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಪಟ್ಟಣದಲ್ಲಿ ಸ್ವಚ್ಛತೆಗೆ ಪುರಸಭೆ ಜಾಗೃತಿ ಜತೆಗೆ ಆದ್ಯತೆ ನೀಡುತ್ತಿದೆ. ಆದರೆ ಪ್ಲಾಸ್ಟಿಕ್ ಬಳಕೆ ಯಥೇಚ್ಛವಾಗಿ ನಡೆಯುತ್ತಿದೆ. ಇತ್ತ ಜೋಡುರಸ್ತೆ ಸೇರಿ ಕೊಳ್ಳಿಯವರ ಕತ್ರಿಯಲ್ಲಿ ನಡೆಯುವ ಬೀದಿಬದಿ ವ್ಯಾಪಾರ ಬಳಿಕ ಉಳಿದ ಕಸವನ್ನು ರಸ್ತೆಯಲ್ಲಿ ಎಸೆಯುವುದರಿಂದ ಚರಂಡಿಗಳಲ್ಲಿ ವ್ಯಾಪಕ ಪ್ರಮಾಣದ ಪ್ಲಾಸ್ಟಿಕ್ ಚೀಲ, ಬಾಟಲಿ ಸೇರಿ ಇತರ ತ್ಯಾಜ್ಯ ಸಂಗ್ರಹವಾಗಿ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಮಾರ್ಪಾಡಾಗಿದೆ. ಮಳೆಗಾಲದಲ್ಲಿ ಚರಂಡಿಯಲ್ಲಿನ ಕೊಳಚೆ ನೀರು ರಸ್ತೆ ಮೇಲೆ ಹರಿದು ಗಬ್ಬುವಾಸನೆ ಬೀರುತ್ತದೆ.&lt;/p&gt;&lt;p&gt;ಪಟ್ಟಣದ 23 ವಾರ್ಡಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯ ಸಂಗ್ರಹಣೆ ವಿಲೇವಾರಿಗೆ 7 ಟಾಟಾ ಎಸ್&zwnj;, 3 ಟ್ರ್ಯಾಕ್ಟರ್, 1 ಡೋಜರ್, 1 ಸ್ವೀಪಿಂಗ್ ಮಷಿನ್, 1 ಟಿಪ್ಪರ್ ಸೇರಿ 17 ವಾಹನಗಳಿದ್ದು,7೭ ಜನ ವಾಹನ ಚಾಲಕರಿದ್ದಾರೆ. ಅಲ್ಲದೆ ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ 56 ಪೌರಕಾರ್ಮಿಕರ ಅಗತ್ಯವಿದೆ. ಆದರೆ 38 ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪರಿಣಾಮ ಕಾರ್ಮಿಕರು ಹಾಗೂ ವಾಹನ ಚಾಲಕರ ಕೊರತೆ ಮೇಲ್ನೋಟಕ್ಕೆ ಕಾಣುತ್ತಿದೆ.&lt;/p&gt;&lt;p&gt;ಅಮೃತ್ 2.0 ಯೋಜನೆ ಕಾಮಗಾರಿಯಿಂದಾಗಿ ಎಲ್ಲೆಂದರಲ್ಲಿ ಮನಸೋ ಇಚ್ಛೆ ರಸ್ತೆಗಳನ್ನು ಒಡೆದಿದ್ದು, ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತದೆ. ಆದರೆ ಪಟ್ಟಣದಲ್ಲಿ ಪೂರ್ಣ ಪ್ರಮಾಣದ ಸ್ವಚ್ಛತೆಗೆ ಪುರಸಭೆ ಪರದಾಡುತ್ತಿದೆ. ಘನತ್ಯಾಜ್ಯ ಘಟಕದಲ್ಲಿ ಸಂಗ್ರಹಿಸಿದ ಕಸದಿಂದ ಉತ್ಪಾದನೆಯಾದ ಎರೆಹುಳು ಗೊಬ್ಬರ 18 ಟನ್ ಮಾರಾಟಕ್ಕೆ ಸಿದ್ಧವಾಗಿದೆ.&lt;/p&gt;&lt;p&gt;ಸ್ವಚ್ಛತೆಗೆ ಕೈಜೋಡಿಸಿ&lt;/p&gt;&lt;p&gt;ಪಟ್ಟಣದ 23 ವಾರ್ಡಗಳಲ್ಲಿ ಪುರಸಭೆಯ ಕಸದ ವಾಹನಗಳು ತೆರಳಿ ಕಸ ಸಂಗ್ರಹಣೆ ಮಾಡುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಕಸದ ವಾಹನಗಳಲ್ಲಿ ಕಸ ಹಾಕುವ ಮೂಲಕ ಪುರಸಭೆಗೆ ಸಹಕಾರ ನೀಡಿ ಸುಂದರ ಪಟ್ಟಣ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಶಿವಕುಮಾರ ಇಲಾಳ ತಿಳಿಸಿದರು.&lt;/p&gt;&lt;p&gt;ಸ್ವಚ್ಛ ಪಟ್ಟಣ&lt;/p&gt;&lt;p&gt;ಪುರಸಭೆಯವರು ಸ್ವಚ್ಛತೆಗೆ ಆದ್ಯತೆ ನೀಡುತ್ತಿದ್ದೇವೆ ಎನ್ನುತ್ತಿದ್ದಾರೆ. ಆದರೆ ಸಚಿವರು ಸೇರಿ ಗಣ್ಯರು ಆಗಮಿಸುವ ವೇಳೆ ಸ್ವಚ್ಛತೆಗಾಗಿ ಆದ್ಯತೆಯನ್ನು ನೀಡುತ್ತಾರೆ. ಉಳಿದ ಸಮಯದಲ್ಲಿ ಅದೇ ರಾಗ, ಅದೇ ತಾಳ ಎನ್ನುವಂಥ ಧೋರಣೆ ಕೈಬಿಟ್ಟರೆ ಸ್ವಚ್ಛ ಪಟ್ಟಣವಾಗುವುದರಲ್ಲಿ ಸಂದೇಹವಿಲ್ಲ ಎಂದು ನಿವಾಸಿಗಳು ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/11-tons-of-garbage-generated-daily-from-23-wards-of-gajendragad-city-cleanliness-not-given-priority-mrq/articleshow-guvo4v3"/>
        </item>
        <item>
            <title><![CDATA[ಬೆಳೆ ಸಮೀಕ್ಷೆ ಕಳ್ಳಾಟಕ್ಕೆ ಬ್ರೇಕ್: ಇಸ್ರೋದಿಂದ ಹೊಸ ಅಸ್ತ್ರ, ತಂತ್ರಜ್ಞಾನ ಆಧಾರಿತ ಸಮೀಕ್ಷೆ]]></title>
            <link>https://kannada.asianetnews.com/karnataka-districts/fasal-bima-yojana-the-government-has-implemented-new-crop-survey-guidelines-with-the-help-of-isro-mrq/articleshow-gxvlgo0</link>
            <guid isPermaLink="true">https://kannada.asianetnews.com/karnataka-districts/fasal-bima-yojana-the-government-has-implemented-new-crop-survey-guidelines-with-the-help-of-isro-mrq/articleshow-gxvlgo0</guid>
            <pubDate>Mon, 06 Jul 2026 05:50:54 +0530</pubDate>
            <description><![CDATA[ಫಸಲ್ ಬಿಮಾ ಯೋಜನೆಯಲ್ಲಿನ ಅಕ್ರಮಗಳನ್ನು ತಡೆಯಲು ಸರ್ಕಾರವು ಇಸ್ರೋ ನೆರವಿನೊಂದಿಗೆ ಹೊಸ ಬೆಳೆ ಸಮೀಕ್ಷೆ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಈ ತಂತ್ರಜ್ಞಾನ ಆಧಾರಿತ ಸಮೀಕ್ಷೆಯು ಜಿಯೋ-ಟ್ಯಾಗಿಂಗ್ ಮತ್ತು ಸ್ಥಳದಲ್ಲೇ ಪರಿಶೀಲನೆಯ ಮೂಲಕ ಪಾರದರ್ಶಕತೆಯನ್ನು ಖಚಿತಪಡಿಸಿ, ನೈಜ ರೈತರಿಗೆ ಮಾತ್ರ ಬೆಳೆ ವಿಮೆ ಮತ್ತು ಪರಿಹಾರ ಸಿಗುವಂತೆ ಮಾಡಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khwbs7t7pg83mt03hg4kkd9e,imgname-----------------------2026-02-20t071854.430-1771552153415.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಕುಮಾರ ಕುಷ್ಟಗಿ&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ಫಸಲ್ ಬಿಮಾ ಯೋಜನೆಯಲ್ಲಿ ನಡೆಯುತ್ತಿದ್ದ ಅಕ್ರಮ ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆವಿಮೆಗೆ ಹೊಸ ಅಗತ್ಯ ಮಾರ್ಗಸೂಚಿಗಳನ್ನು ಒಳಗೊಂಡಿರುವ ಆದೇಶವನ್ನು ಜೂ.30ರಂದು ಹೊರಡಿಸಿದ್ದು, ಇದರಿಂದಾಗಿ ಬೆಳೆ ಸಮೀಕ್ಷೆ ಪ್ರಕ್ರಿಯೆ ಮತ್ತಷ್ಟು ಪಾರದರ್ಶಕ, ತಾಂತ್ರಿಕವಾಗಿ ಸಶಕ್ತವಾಗಲಿದೆ.&lt;/p&gt;&lt;p&gt;ಬೆಳೆ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ದಾಖಲಿಸುವುದು, ಬೆಳೆ ಬೆಳೆಯದ ಜಮೀನಿನಲ್ಲೂ ಬೆಳೆ ತೋರಿಸುವುದು, ಒಂದೇ ಜಮೀನನ್ನು ಹಲವು ಬಾರಿ ದಾಖಲಿಸುವುದು, ಬೆಳೆ ವಿಮೆ ಹಾಗೂ ಪರಿಹಾರ ಪಡೆಯಲು ಸುಳ್ಳು ದಾಖಲೆಗಳನ್ನು ಸೃಷ್ಟಿಸುವುದು ಸೇರಿದಂತೆ ಹಲವು ಅಕ್ರಮಗಳ ಬಗ್ಗೆ ದೂರುಗಳು ಬರುತ್ತಿದ್ದವು. ಇದರಿಂದ ಸರ್ಕಾರದ ಕೋಟ್ಯಂತರ ರುಪಾಯಿ ಸಬ್ಸಿಡಿ, ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಇತರ ಕೃಷಿ ಯೋಜನೆಗಳಲ್ಲಿ ದುರುಪಯೋಗವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರವು ತಂತ್ರಜ್ಞಾನ ಆಧಾರಿತ ಸಮೀಕ್ಷೆಗೆ ಹೆಚ್ಚಿನ ಒತ್ತು ನೀಡಿದೆ.&lt;/p&gt;&lt;h2&gt;&lt;strong&gt;ನೂತನ ಆದೇಶದಲ್ಲೇನಿದೆ?&lt;/strong&gt;&lt;/h2&gt;&lt;p&gt;ಮೊಬೈಲ್ ಆಧಾರಿತ ಡಿಜಿಟಲ್ ಬೆಳೆ ಸಮೀಕ್ಷೆ ಮಾಡಬೇಕು, ಪ್ರತಿ ದಾಖಲೆಗೆ ಜಿಯಾಗ್ರಾಫಿಕಲ್ ರೆಫರೆನ್ಸ್&zwnj; ಫೋಟೋ ಕಡ್ಡಾಯ. ಅಲ್ಲದೇ ಸ್ಥಳದಲ್ಲೇ ರೈತರ ಹಾಗೂ ಜಮೀನಿನ ಮಾಹಿತಿಯನ್ನು ಪರಿಶೀಲಿಸಿ ದಾಖಲಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಸ್ರೋ ಸಹಾಯದಲ್ಲಿ ಕೇವಲ 5 ಮೀಟರ್ ಎತ್ತರದಿಂದ ರೈತರು ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳ ಫೋಟೋಗಳನ್ನು ತೆಗೆಯಲಾಗುತ್ತದೆ. ಇವುಗಳನ್ನು ಜಿಐಎಸ್ ಮಾಹಿತಿಯೊಂದಿಗೆ ಸಮನ್ವಯ ಮಾಡಿ ಸ್ಥಳದಲ್ಲಿಯೇ ಪರಿಶೀಲನೆ ಮಾಡಲಾಗುತ್ತದೆ. ಇದರಿಂದಾಗಿ ಬೆಳೆ ಬೆಳೆಯದ ಜಮೀನನ್ನು ಬೆಳೆ ಪ್ರದೇಶ ಎಂದು ದಾಖಲಿಸುವ ಅವಕಾಶ ಇರುವುದಿಲ್ಲ. ಜತೆಗೆ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿಸಿದ್ದು, ತಪ್ಪು ದಾಖಲೆಗಳಿಗೆ ಸಹಿ ಮಾಡಿದಲ್ಲಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಸಮೀಕ್ಷೆ ಪೂರ್ಣಗೊಂಡ ಬಳಿಕ ಬಹುಹಂತದ ಪರಿಶೀಲನೆ ಮತ್ತು ದೃಢೀಕರಣ ಕಡ್ಡಾಯಗೊಳಿಸಲಾಗಿದೆ.&lt;/p&gt;&lt;h3&gt;&lt;strong&gt;ಹಲವು ರೀತಿಯಲ್ಲಿ ಲಾಭ:&lt;/strong&gt;&lt;/h3&gt;&lt;p&gt;ನಕಲಿ ಬೆಳೆ ದಾಖಲೆಗಳನ್ನು ಸೃಷ್ಟಿಸುವುದು ಕಷ್ಟವಾಗುತ್ತದೆ. ಒಂದೇ ಜಮೀನಿಗೆ ಹಲವು ಬಾರಿ ದಾಖಲಾತಿ ಮಾಡುವ ಸಾಧ್ಯತೆ ಕಡಿಮೆ ಆಗುತ್ತದೆ. ಬೆಳೆ ವಿಮೆ ಹಾಗೂ ಪರಿಹಾರಕ್ಕೆ ಸಲ್ಲಿಸುವ ಸುಳ್ಳು ಮಾಹಿತಿಯನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ನೈಜವಾಗಿ ಬೆಳೆ ಬೆಳೆದ ರೈತರಿಗೆ ಮಾತ್ರ ಸರ್ಕಾರಿ ಸೌಲಭ್ಯಗಳು ತಲುಪುವ ಸಾಧ್ಯತೆ ಹೆಚ್ಚುತ್ತದೆ. ಉಪಗ್ರಹ ಮಾಹಿತಿ, ಜಿಯೋ ಟ್ಯಾಗ್ ಹಾಗೂ ಸ್ಥಳ ಪರಿಶೀಲನೆ ಒಂದಕ್ಕೊಂದು ಹೊಂದಾಣಿಕೆ ಆಗದಿದ್ದರೆ ತಕ್ಷಣವೇ ವ್ಯತ್ಯಾಸ ಪತ್ತೆಯಾಗಲಿದೆ.&lt;/p&gt;&lt;h3&gt;&lt;strong&gt;ಬೇರೆ ಬ್ಯಾಂಕಲ್ಲಿ ಸಾಲ ಪಡೆದಿಲ್ಲ ಎಂದು ಸ್ವಯಂ ಘೋಷಣೆ ಕಡ್ಡಾಯ&lt;/strong&gt;&lt;/h3&gt;&lt;p&gt;ಫಸಲ್ ಬಿಮಾ ಯೋಜನೆ ಬೆಳೆಸಾಲ ಪಡೆದುಕೊಂಡ ರೈತರು ಬೇರೆ ಬ್ಯಾಂಕ್&zwnj;ಗಳಲ್ಲಿ ಸಾಲ ಪಡೆದಿಲ್ಲ ಎಂಬುದನ್ನು ಸ್ವಯಂ ಘೋಷಿಸುವುದು ಕಡ್ಡಾಯ. ಆದರೆ ಯಾವ ಹೊಲದ ಮೇಲೆ ಬೆಳೆಸಾಲ ಪಡೆದಿರುತ್ತಾರೆಯೋ ಅದೇ ಬೆಳೆಗೆ ಸಹಜವಾಗಿಯೇ ಸಾಲಕೊಟ್ಟ ಬ್ಯಾಂಕ್&zwnj;ನಲ್ಲಿ ಬೆಳೆ ವಿಮೆ ಭರಣ ಮಾಡಲಾಗುತ್ತಿತ್ತು. ಅದೇ ಜಮೀನನ್ನು ರೈತರು ಗ್ರಾಮ ಒನ್ ಅಥವಾ ನೆಟ್ ಸೆಂಟರ್&zwnj;ಗಳಲ್ಲಿ ತಮಗೆ ಬೇಕಾದ ಬೆಳೆಗೆ ಇದುವರೆಗೂ ವಿಮೆ ಭರಣ ಮಾಡುತ್ತಿದ್ದರು. ಆದರೆ ಈ ಬಾರಿ ಬೆಳೆಸಾಲ ಪಡೆದುಕೊಂಡಿರುವ ರೈತರು ಕಡ್ಡಾಯವಾಗಿ ನಾನು ಬೇರೆಡೆ ಎಲ್ಲಿಯೂ ಸಾಲ ಪಡೆದುಕೊಂಡಿಲ್ಲ ಎಂದು ಸ್ವಯಂ ಧೃಢೀಕರಣ ಕೊಡಬೇಕಿದೆ. ಬ್ಯಾಂಕ್ ಸಾಲ, ಸ್ವಯಂ ಧೃಢೀಕರಣ ಪತ್ರ ಮತ್ತು ಹೊಲದಲ್ಲಿನ ಬೆಳೆ ಎಲ್ಲವೂ ತಾಳೆ ಆದಾಗ ಮಾತ್ರ ರೈತರಿಗೆ ವಿಮೆ ಪರಿಹಾರ ಸಿಗಲಿದೆ.&lt;/p&gt;&lt;p&gt;&lt;strong&gt;ತಪ್ಪು ಮಾಹಿತಿಗೆ ಕಡಿವಾಣ&lt;/strong&gt;&lt;/p&gt;&lt;p&gt;ಸರ್ಕಾರದ ನೂತನ ನಿಯಮಗಳ ಅಡಿಯಲ್ಲಿ ನೈಜ ರೈತರಿಗೆ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಇನ್&zwnj;ಪುಟ್ ಸಬ್ಸಿಡಿ, ಕೃಷಿ ಯೋಜನೆಗಳ ಲಾಭ ಹಾಗೂ ಬ್ಯಾಂಕ್ ಸಾಲದ ಪ್ರಕ್ರಿಯೆಯಲ್ಲಿ ನಿಖರ ದಾಖಲೆಗಳು ಲಭ್ಯವಾಗಲಿವೆ. ತಪ್ಪು ಮಾಹಿತಿ ಹಾಗೂ ದಾಖಲೆಗಳನ್ನು ನೀಡುವುದಕ್ಕೆ ಕಡಿವಾಣ ಬೀಳಲಿದೆ. ಪ್ರಾಮಾಣಿಕ ರೈತರು ವಂಚಿತರಾಗುವ ಸಾಧ್ಯತೆಯೂ ಕಡಿಮೆಯಾಗಲಿದೆ.&lt;/p&gt;&lt;p&gt;-ಚೇತನಾ ಪಾಟೀಲ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/fasal-bima-yojana-the-government-has-implemented-new-crop-survey-guidelines-with-the-help-of-isro-mrq/articleshow-gxvlgo0"/>
        </item>
        <item>
            <title><![CDATA[ಗದಗ: ಗೋಡಂಬಿ ಎಂದು ಔಡಲ ಕಾಯಿ ತಿಂದ 25ಕ್ಕೂ ಹೆಚ್ಚು ಶಾಲಾ ಮಕ್ಕಳು ತೀವ್ರ ಅಸ್ವಸ್ಥ!]]></title>
            <link>https://kannada.asianetnews.com/karnataka-districts/over-25-children-rushed-to-gadag-gims-hospital-after-consuming-wild-castor-beans-during-school-playtime-gdp/articleshow-ka6ng64</link>
            <guid isPermaLink="true">https://kannada.asianetnews.com/karnataka-districts/over-25-children-rushed-to-gadag-gims-hospital-after-consuming-wild-castor-beans-during-school-playtime-gdp/articleshow-ka6ng64</guid>
            <pubDate>Thu, 02 Jul 2026 13:31:15 +0530</pubDate>
            <description><![CDATA[ಗದಗ ತಾಲೂಕಿನ ಬೆಳಧಡಿ ತಾಂಡಾದಲ್ಲಿ, ಶಾಲಾ ಆಟದ ಸಮಯದಲ್ಲಿ ಗೋಡಂಬಿ ಬೀಜವೆಂದು ತಪ್ಪಾಗಿ ಭಾವಿಸಿ ವಿಷಕಾರಿ 'ಔಡಲ ಕಾಯಿ' ತಿಂದ ಪರಿಣಾಮ 25ಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ವಾಂತಿ, ಭೇದಿ, ತಲೆಸುತ್ತಿನಿಂದ ಬಳಲುತ್ತಿದ್ದ ಮಕ್ಕಳನ್ನು ತಕ್ಷಣವೇ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01fr7tdsbev8jw5gex6xf32qqk,imgname-images--2--jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ:&lt;/strong&gt; ಶಾಲಾ ಆಟದ ಸಮಯದಲ್ಲಿ ಮಕ್ಕಳಿಬ್ಬರು ಮಾಡಿದ ಸಣ್ಣದೊಂದು ಯಡವಟ್ಟು ಈಗ ಆತಂಕ ತಂದಿಟ್ಟಿದೆ . ಗಿಡದಲ್ಲಿದ್ದ ಕಾಯನ್ನು ಗೋಡಂಬಿ ಬೀಜ ಎಂದು ತಪ್ಪಾಗಿ ಭಾವಿಸಿ ತಿಂದ ಪರಿಣಾಮ 25ಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಗದಗ ತಾಲೂಕಿನ ಬೆಳಧಡಿ ತಾಂಡಾದಲ್ಲಿ ಸಂಭವಿಸಿದೆ.&lt;/p&gt;&lt;h2&gt;ಆಟದ ಸಮಯ ಜವರಾಯನಾದ 'ಔಡಲ ಕಾಯಿ'!&lt;/h2&gt;&lt;p&gt;ಸ್ಥಳೀಯ ಮೂಲಗಳ ಪ್ರಕಾರ, ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಧಡಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ತರಗತಿಗಳು ನಡೆಯುತ್ತಿದ್ದವು. ಶಾಲಾ ಆಟದ ಅವಧಿಯಲ್ಲಿ (Sports time) 2, 3 ಮತ್ತು 4ನೇ ತರಗತಿಯ ಪುಟಾಣಿ ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಶಾಲೆಯ ಆವರಣದ ಪಕ್ಕದಲ್ಲೇ ಇದ್ದ ಗಿಡವೊಂದರಲ್ಲಿ ಬಿಟ್ಟಿದ್ದ ಕಾಯಿಗಳನ್ನು ಗಮನಿಸಿದ ಮಕ್ಕಳು, ಅವುಗಳನ್ನು ಗೋಡಂಬಿ ಬೀಜ ಎಂದು ಭಾವಿಸಿ ತಿಂದಿದ್ದಾರೆ.&lt;/p&gt;&lt;p&gt;ಇದು ಒಬ್ಬರಿಂದ ಒಬ್ಬರಿಗೆ ವಿಷಯ ಮುಟ್ಟಿ ಒಟ್ಟು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆ ಬೀಜಗಳನ್ನು ಕಿತ್ತು ತಿಂದಿದ್ದಾರೆ. ಆದರೆ, ಆ ಮಕ್ಕಳು ತಿಂದಿದ್ದು ಗೋಡಂಬಿಯನ್ನಲ್ಲ, ಬದಲಿಗೆ ವಿಷಕಾರಿ ಅಂಶವಿರುವ 'ಔಡಲ ಕಾಯಿ' (Castor Seeds - ಹರಳೆಣ್ಣೆ ಕಾಯಿ) ಎಂಬುದು ಬಳಿಕ ಬೆಳಕಿಗೆ ಬಂದಿದೆ&lt;/p&gt;&lt;h2&gt;ವಾಂತಿ, ಭೇದಿ, ತಲೆಸುತ್ತು, ಮಕ್ಕಳ ಆರೋಗ್ಯದಲ್ಲಿ ಏರುಪೇರು!&lt;/h2&gt;&lt;p&gt;ಬೀಜ ತಿಂದ ಕೆಲವೇ ನಿಮಿಷಗಳಲ್ಲಿ ಮಕ್ಕಳ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದೆ. ಒಂದಾದ ಮೇಲೊಂದರಂತೆ ಮಕ್ಕಳಿಗೆ ತೀವ್ರ ಹೊಟ್ಟೆನೋವು, ವಾಂತಿ, ಭೇದಿ ಹಾಗೂ ತಲೆಸುತ್ತುವಿಕೆ ಕಾಣಿಸಿಕೊಂಡಿದೆ. ಏಕಾಏಕಿ ಇಷ್ಟೊಂದು ಸಂಖ್ಯೆಯ ಮಕ್ಕಳು ಅಸ್ವಸ್ಥಗೊಂಡದನ್ನು ನೋಡಿ ಶಾಲಾ ಶಿಕ್ಷಕರು ಹಾಗೂ ಸ್ಥಳೀಯ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಸುಮಾರು 18 ಬಾಲಕಿಯರು ಹಾಗೂ 9 ಬಾಲಕರು ಸೇರಿದ್ದಾರೆ ಎಂದು ತಿಳಿದುಬಂದಿದೆ.&lt;/p&gt;&lt;h2&gt;ಗದಗ ಜಿಮ್ಸ್ (GIMS) ಆಸ್ಪತ್ರೆಗೆ ದಾಖಲು:&lt;/h2&gt;&lt;p&gt;ವಿಷಯ ತಿಳಿಯುತ್ತಿದ್ದಂತೆಯೇ ಪರಿಸ್ಥಿತಿಯ ಗಂಭೀರತೆ ಅರಿತ ಶಾಲಾ ಮಂಡಳಿ ಮತ್ತು ಪೋಷಕರು, ಅಸ್ವಸ್ಥಗೊಂಡ ಎಲ್ಲಾ 25ಕ್ಕೂ ಹೆಚ್ಚು ಮಕ್ಕಳನ್ನು ತಕ್ಷಣವೇ ಗದಗದ ಜಿಮ್ಸ್ (GIMS) ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಜಿಮ್ಸ್ ಆಸ್ಪತ್ರೆಯ ಮಕ್ಕಳ ತುರ್ತು ಚಿಕಿತ್ಸಾ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಮಕ್ಕಳ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ. ಸದ್ಯಕ್ಕೆ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಶಾಲಾ ಆವರಣದ ಸುತ್ತಮುತ್ತ ಇಂತಹ ವಿಷಕಾರಿ ಗಿಡ-ಗಂಟೆಗಳು ಇರಬಾರದು ಹಾಗೂ ಅಪರಿಚಿತ ಕಾಯಿಗಳನ್ನು ತಿನ್ನಬಾರದು ಎಂದು ಮಕ್ಕಳಿಗೆ ಜಾಗೃತಿ ಮೂಡಿಸಬೇಕಾದ ಅಗತ್ಯವನ್ನು ಈ ಘಟನೆ ನೆನಪಿಸಿದೆ.&lt;/p&gt;]]></content:encoded>
            <category>gadag</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/over-25-children-rushed-to-gadag-gims-hospital-after-consuming-wild-castor-beans-during-school-playtime-gdp/articleshow-ka6ng64"/>
        </item>
        <item>
            <title><![CDATA[3 ಬೂತ್‌ನಲ್ಲಿ ನನ್ನ ಹೆಸರಿದೆ ಎಂದ ಬಸವರಾಜ್ ಬೊಮ್ಮಾಯಿ ಕ್ಷಮೆ ಕೇಳಲಿ: ಎಚ್‌ಕೆ ಪಾಟೀಲ್]]></title>
            <link>https://kannada.asianetnews.com/karnataka-districts/basavaraj-bommai-should-apologize-for-saying-my-name-is-in-booth-3-hk-patil-mrq/articleshow-m6t7zqx</link>
            <guid isPermaLink="true">https://kannada.asianetnews.com/karnataka-districts/basavaraj-bommai-should-apologize-for-saying-my-name-is-in-booth-3-hk-patil-mrq/articleshow-m6t7zqx</guid>
            <pubDate>Mon, 06 Jul 2026 05:42:59 +0530</pubDate>
            <description><![CDATA[ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಚ್.ಕೆ. ಪಾಟೀಲರ ಹೆಸರು 3 ಬೂತ್&zwnj;ಗಳಲ್ಲಿದೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಆಧಾರರಹಿತ ಎಂದು ತಳ್ಳಿಹಾಕಿದ ಪಾಟೀಲರು, ಅದು ಬೇರೆ ವ್ಯಕ್ತಿಗಳ ಹೆಸರು ಎಂದು ಸ್ಪಷ್ಟನೆ ನೀಡಿ ಕ್ಷಮೆಗೆ ಆಗ್ರಹಿಸಿದ್ದಾರೆ. ಆದರೆ, ದಾಖಲೆ ಆಧರಿಸಿ ಮಾತನಾಡಿದ್ದೇನೆ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwtc4j5svgcv1vakdage0nzw,imgname-hk-patil-1783296575673.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ಉತ್ತಮ ರಾಜಕೀಯ ಕುಟುಂಬದಿಂದ ಬಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲವಾರು ದಶಕಗಳ ಕಾಲ ರಾಜಕೀಯದಲ್ಲಿ ಇದ್ದವರು. 3 ಬೂತ್&zwnj;ಗಳಲ್ಲಿ ನನ್ನ ಹೆಸರು ಇದೇ ಎಂದು ಅವರು ಮಾಡಿರುವ ಆರೋಪ ಸಂಪೂರ್ಣ ಆಧಾರರಹಿತ. ಅವರು ಕೂಡಲೇ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಆಗ್ರಹಿಸಿದ್ದಾರೆ.&lt;/p&gt;&lt;p&gt;ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೊಮ್ಮಾಯಿ ಅವರು ಯಾವುದೇ ದಾಖಲೆಗಳಿಲ್ಲದೆ ಸಾರ್ವಜನಿಕವಾಗಿ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದರು.&lt;/p&gt;&lt;p&gt;ಹುಲಕೋಟಿ ಗ್ರಾಮದಲ್ಲಿ ಒಂದೇ ಹೆಸರಿನ ಇಬ್ಬರು ಎಚ್.ಕೆ.ಪಾಟೀಲರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಅವರವರ ಭಾವಚಿತ್ರ ಹಾಗೂ ವಿವರಗಳು ಸ್ಪಷ್ಟವಾಗಿ ದಾಖಲಾಗಿವೆ. ಹುಲಕೋಟಿ ಗ್ರಾಮದ ಬೂತ್ ಸಂಖ್ಯೆ 143ರ ಕ್ರಮ ಸಂಖ್ಯೆ 183ರಲ್ಲಿ ನನ್ನ ಹೆಸರಿದೆ. ಅದೇ ಬೂತ್&zwnj;ನ ಕ್ರಮ ಸಂಖ್ಯೆ 161ರಲ್ಲಿ ತಮ್ಮ ಸಹೋದರ ಸಂಬಂಧಿಯಾಗಿರುವರ ಹೆಸರಿದ್ದು, ಅವರು ಕೂಡಾ ಎಚ್.ಕೆ.ಪಾಟೀಲ ಆಗಿದ್ದಾರೆ. ಅದೇ ರೀತಿ ಬೂತ್ ಸಂಖ್ಯೆ 153 ಅಸುಂಡಿ ಗ್ರಾಮಕ್ಕೆ ಸಂಬಂಧಿಸಿದ್ದರೂ ಅದನ್ನು ಹುಲಕೋಟಿ ಎಂದು ಉಲ್ಲೇಖಿಸಿದ್ದಲ್ಲದೇ ಕ್ರಮ ಸಂಖ್ಯೆ 393ರಲ್ಲಿ ಎಚ್.ಕೆ.ಪಾಟೀಲರ ಹೆಸರಿದೆ ಎಂದು ಆರೋಪಿಸಿದ್ದಾರೆ. ಆದರೆ ಆ ಹೆಸರು ನನ್ನದಲ್ಲ, ಅಲ್ಲಿಯೂ ಒಬ್ಬರು ಎಚ್.ಕೆ.ಪಾಟೀಲ ಎನ್ನುವ ಬೇರೆ ಮತದಾರರಿದ್ದಾರೆ. ಬೊಮ್ಮಾಯಿ ಅವರು ಈ ವಾಸ್ತವಾಂಶವನ್ನು ಪರಿಶೀಲಿಸದೇ ಇನ್ನೊಬ್ಬರ ಬಗ್ಗೆ ಹೇಳಿಕೆ ನೀಡಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದರು.&lt;/p&gt;&lt;p&gt;ನನ್ನ 40 ವರ್ಷ ಸಾರ್ವಜನಿಕ ಜೀವನವನ್ನು ಅವರೂ ನೋಡಿದ್ದಾರೆ. ಆದರೆ ಭಾನುವಾರ ಅವರು ವೈಯಕ್ತಿಕವಾಗಿ ನನ್ನ ಹೆಸರನ್ನು ಪ್ರಸ್ತಾಪಿಸಿ ಆರೋಪಿಸಿರುವುದು ನೋವು ತಂದಿದೆ. ಪ್ರಜಾಪ್ರಭುತ್ವದಲ್ಲಿ ಸಿಎಂ ಹುದ್ದೆ ಅಲಂಕರಿಸಿದ ವ್ಯಕ್ತಿ ಯಾವುದೇ ವಿಷಯವನ್ನು ಹೇಳುವ ಮೊದಲು ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಆದರೆ, ಬೊಮ್ಮಾಯಿ ಅವರು ಸುಳ್ಳು ಆರೋಪ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ, ಕ್ಷಮೆ ಪ್ರಶ್ನೆಯೇ ಇಲ್ಲ: ಬೊಮ್ಮಾಯಿ&lt;/strong&gt;&lt;/h2&gt;&lt;p&gt;ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಕುರಿತು ಹಾಗೂ ಮಾಜಿ ಸಚಿವ ಎಚ್&zwnj;.ಕೆ.ಪಾಟೀಲ ಅವರ ಹೆಸರು 3 ಬೂತ್&zwnj;ಗಳಲ್ಲಿ ಇದೇ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ಬಗ್ಗೆ ಮುಖ್ಯ ಚುನಾವಣಾ ಅಧಿಕಾರಿ ಪರಿಶೀಲನೆ ನಡೆಸಬೇಕು. ನಾನು ವೈಯಕ್ತಿಕವಾಗಿ ಆಪಾದನೆ ಮಾಡಿಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ​ಮತಪಟ್ಟಿಯಲ್ಲಿರುವ ಅಧಿಕೃತ ದಾಖಲೆಗಳ ಅನುಗುಣವಾಗಿಯೇ ಶನಿವಾರ ಎಚ್.ಕೆ.ಪಾಟೀಲ ಅವರ ಹೆಸರಿನಲ್ಲಿ 3 ಮತಗಳಿರುವ ಕುರಿತು ಹೇಳಿಕೆ ನೀಡಲಾಗಿತ್ತು. ಒಂದೇ ಕ್ಷೇತ್ರದಲ್ಲಿ, ಒಂದೇ ಊರಿನಲ್ಲಿ ಹಾಗೂ ಪಕ್ಕದ ಊರಿನಲ್ಲಿ ವ್ಯಕ್ತಿಯ ಹೆಸರು ಮತ್ತು ತಂದೆಯ ಹೆಸರು ಒಂದೇ ತರ ಇರುವುದರಿಂದ ಪಕ್ಷದ ಮುಖಂಡರು ಸಂಶಯ ವ್ಯಕ್ತಪಡಿಸಿದ್ದರು. ಆ ಮಾಹಿತಿಯ ಆಧಾರದ ಮೇಲೆಯೇ ಈ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು.&lt;/p&gt;&lt;p&gt;ಈ ಗೊಂದಲಕ್ಕೆ ಸಂಬಂಧಿಸಿದಂತೆ ಎಚ್.ಕೆ.ಪಾಟೀಲ ಅವರು ಭಾನುವಾರ ನೀಡಿರುವ ಸ್ಪಷ್ಟೀಕರಣವನ್ನು ಚುನಾವಣಾ ಅಧಿಕಾರಿಗಳು ಸೂಕ್ತವಾಗಿ ಮತ್ತು ಕೂಲಂಕಷವಾಗಿ ಪರಿಶೀಲಿಸಬೇಕು. ಇದು ಕೇವಲ ಎಚ್.ಕೆ.ಪಾಟೀಲ ಅವರಿಗೆ ಮಾತ್ರ ಸೀಮಿತವಾಗಿಲ್ಲ. ಒಂದೇ ಹೆಸರಿನಲ್ಲಿ 4 ರಿಂದ 5 ಮತಗಳಿರುವ ಹಲವಾರು ಪ್ರಕರಣಗಳಿದ್ದು, ಈಗಾಗಲೇ 3- 4 ಉದಾಹರಣೆಗಳನ್ನು ನೀಡಲಾಗಿದೆ. ಮ್ಯಾಪಿಂಗ್ ಮಾಡಿದ ನಂತರವೂ ಇಂತಹ ತಪ್ಪುಗಳು ಮರುಕಳಿಸುತ್ತಿರುವುದು ಗಂಭೀರ ವಿಚಾರ ಎಂದರು.&lt;/p&gt;&lt;h3&gt;&lt;strong&gt;ವೈಯಕ್ತಿಕ ಆಪಾದನೆ ಮಾಡಿಲ್ಲ:&lt;/strong&gt;&lt;/h3&gt;&lt;p&gt;ನನ್ನ ಬಳಿ ಇದ್ದ ಮಾಹಿತಿಯನ್ನಷ್ಟೇ ಬಹಿರಂಗಪಡಿಸಿದ್ದೇನೆ ಹೊರತು, ಎಚ್.ಕೆ.ಪಾಟೀಲ ಅವರ ಮೇಲೆ ವೈಯಕ್ತಿಕವಾಗಿ ಯಾವುದೇ ಆಪಾದನೆ ಮಾಡಿಲ್ಲ. ಹೀಗಿರುವಾಗ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕ್ಷಮೆ ಕೇಳುವಂತಹ ತಪ್ಪೇನೂ ನಡೆದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/basavaraj-bommai-should-apologize-for-saying-my-name-is-in-booth-3-hk-patil-mrq/articleshow-m6t7zqx"/>
        </item>
        <item>
            <title><![CDATA[ಗದಗ ಜಿಲ್ಲೆ ಜನರಿಗೆ ಜಲಸಂಕಟ: ಒಂದು ಹನಿ ನೀರಿಲ್ಲದಂತೆ ಬತ್ತಿ ಹೋದ 237 ಕೊಳವೆಬಾವಿಗಳು!]]></title>
            <link>https://kannada.asianetnews.com/karnataka-districts/lack-of-rain-karnataka-draught-gadag-district-237-borewells-are-fully-dry-no-water-for-drink/articleshow-nbvvxgz</link>
            <guid isPermaLink="true">https://kannada.asianetnews.com/karnataka-districts/lack-of-rain-karnataka-draught-gadag-district-237-borewells-are-fully-dry-no-water-for-drink/articleshow-nbvvxgz</guid>
            <pubDate>Tue, 28 Jul 2026 15:19:25 +0530</pubDate>
            <description><![CDATA[ಗದಗ ಜಿಲ್ಲೆಯಲ್ಲಿ ಮಳೆಯ ತೀವ್ರ ಅಭಾವ ಮತ್ತು ಅಂತರ್ಜಲ ಮಟ್ಟದ ಕುಸಿತದಿಂದಾಗಿ, 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 1253 ಕೊಳವೆಬಾವಿಗಳ ಪೈಕಿ 237 ಸಂಪೂರ್ಣವಾಗಿ ಬತ್ತಿ ಹೋಗಿವೆ. ಈ ನೀರಿನ ಬಿಕ್ಕಟ್ಟು ಜನರ ಬದುಕುವ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದ್ದು, ಸ್ಥಗಿತಗೊಂಡ ಬೋರ್&zwnj;ವೆಲ್&zwnj;ಗಳನ್ನು ದುರಸ್ತಿಪಡಿಸಲು ಅಥವಾ ಪರ್ಯಾಯ ವ್ಯವಸ್ಥೆ ಮಾಡಲು ಒತ್ತಾಯ ಕೇಳಿಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ksd0vy6e2ykzt8srfp82nksd,imgname-borewell--2--1779627325646.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ವರದಿ-ಶಿವಕುಮಾರ ಕುಷ್ಟಗಿ&lt;/strong&gt;&lt;/p&gt;&lt;p&gt;&lt;strong&gt;ಗದಗ (ಜು.28): ಮ&lt;/strong&gt;ಳೆಯ ತೀವ್ರ ಅಭಾವ, ಅಂತರ್ಜಲ ಮಟ್ಟದ ನಿರಂತರ ಕುಸಿತದಿಂದಾಗಿ ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪ್ರಮುಖ ಆಸರೆಯಾಗಿದ್ದ ಕೊಳವೆಬಾವಿಗಳು (ಬೋರ್&zwnj;ವೆಲ್) ಬತ್ತುತ್ತಿವೆ. ಭೂಮಿಯ ಆಳದಲ್ಲಿದ್ದ ನೀರು ಸಂಪೂರ್ಣ ಬರಿದಾಗುತ್ತಿದ್ದು, ಆತಂಕ ಎದುರಾಗಿದೆ.&lt;/p&gt;&lt;p&gt;ಜಿಲ್ಲೆಯ ಒಟ್ಟು 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿರ್ವಹಿಸಲ್ಪಡುವ ಒಟ್ಟು 1253 ಕೊಳವೆಬಾವಿಗಳಿವೆ. ಪ್ರಸ್ತುತ ಭೀಕರ ಬರಗಾಲದ ಸನ್ನಿವೇಶದಲ್ಲಿ ಬರೋಬ್ಬರಿ 237 ಕೊಳವೆಬಾವಿಗಳು ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಂಡಿದ್ದು, ಪ್ರಸ್ತುತ 1016 ಕೊಳವೆಬಾವಿಗಳು ಮಾತ್ರ ಜನರ ಬಾಯಾರಿಕೆ ತಣಿಸುತ್ತಿವೆ.&lt;/p&gt;&lt;h2&gt;&lt;strong&gt;ಹಲವು ಸಮಸ್ಯೆ, ಒಂದೇ ಕಾರಣ:&lt;/strong&gt;&lt;/h2&gt;&lt;p&gt;ಮಳೆ ಕೊರತೆಯ ಪರಿಣಾಮದಿಂದಾಗಿ ಅಂತರ್ಜಲ ಮಟ್ಟ 350ರಿಂದ 500 ಅಡಿಗಳಿಗೂ ಆಳಕ್ಕೆ ಕುಸಿದಿರುವುದರಿಂದ ನೀರೆತ್ತುವ ಮೋಟರ್&zwnj;ಗಳ ಮೇಲೆ ತೀವ್ರ ಒತ್ತಡ ಬಿದ್ದು ಸುಟ್ಟುಹೋಗುತ್ತಿರುವುದು ಮತ್ತು ನೀರಿಲ್ಲದೆ ಬೋರ್&zwnj;ವೆಲ್&zwnj;ಗಳು ಖಾಲಿಯಾಗುತ್ತಿರುವುದು ಈ ತಾಂತ್ರಿಕ ಬಿಕ್ಕಟ್ಟಿಗೆ ಮುಖ್ಯ ಕಾರಣವಾಗಿದ್ದು, ಅವುಗಳ ದುರಸ್ತಿ ನಿಗದಿತ ಸಮಯದಲ್ಲಿ ಆಗುತ್ತಿಲ್ಲ. ಇದಕ್ಕೆ ಒಂದೆಡೆ ಅನುದಾನದ ಕೊರತೆ, ಇನ್ನೊಂದೆಡೆ ಇಚ್ಛಾಶಕ್ತಿಯ ಕೊರತೆ ಪ್ರಮುಖ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಕೊಳವೆಬಾವಿ ವಿವರ:&amp;nbsp;&lt;/strong&gt;&lt;/h2&gt;&lt;p&gt;ಗದಗ- ಬೆಟಗೇರಿ ಅವಳಿ ನಗರದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು 834 ಕೊಳವೆಬಾವಿಗಳನ್ನು ಹೊಂದಿದೆ. ಅದರೊಟ್ಟಿಗೆ 136 ಬೋರ್&zwnj;ವೆಲ್&zwnj;ಗಳು ಬಂದ್ ಆಗಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಕೊಳವೆಬಾವಿಗಳು ಬಂದ್ ಆಗಿರುವುದು ಗದಗ ಬೆಟಗೇರಿ ಅವಳಿ ನಗರದಲ್ಲಿ. ಉಳಿದಂತೆ ನರಗುಂದ ಪುರಸಭೆಯ 54 ಕೊಳವೆಬಾವಿಗಳಲ್ಲಿ 35 ಬೋರ್&zwnj;ವೆಲ್&zwnj;ಗಳಲ್ಲಿ ಬತ್ತಿವೆ. ಕೆಲವು ದುರಸ್ತಿಗಾಗಿ ಕಾಯುತ್ತಿವೆ. ರೋಣ ಪುರಸಭೆಯ 42ರಲ್ಲಿ 22 ಹಾಗೂ ಲಕ್ಷ್ಮೇಶ್ವರ ಪುರಸಭೆಯ 104ರಲ್ಲಿ 22 ಕೊಳವೆಬಾವಿಗಳು ದುರಸ್ತಿಯಲ್ಲಿವೆ. ಗಜೇಂದ್ರಗಡದಲ್ಲಿ 8, ಮುಂಡರಗಿಯಲ್ಲಿ 4, ನರೇಗಲ್ಲನಲ್ಲಿ 4, ಶಿರಹಟ್ಟಿಯಲ್ಲಿ 4 ಹಾಗೂ ಮುಳಗುಂದ ಪಟ್ಟಣ ಪಂಚಾಯ್ತಿಯಲ್ಲಿ 2 ಕೊಳವೆಬಾವಿಗಳು ಸಂಪೂರ್ಣ ಸ್ಥಗಿತಗೊಂಡಿವೆ.&lt;/p&gt;&lt;p&gt;&lt;strong&gt;ಕುಡಿಯುವ ನೀರು ಮಾನವ ಹಕ್ಕು:&amp;nbsp;&lt;/strong&gt; ಕುಡಿಯುವ ನೀರು ಮೂಲಭೂತ ಹಾಗೂ ಪ್ರತಿಯೊಬ್ಬ ನಾಗರಿಕನ ನೈಸರ್ಗಿಕ ಹಕ್ಕಾಗಿದೆ. ಭಾರತೀಯ ಸಂವಿಧಾನದ ವಿಧಿ 21ರ (ಬದುಕುವ ಹಕ್ಕು) ಅಡಿಯಲ್ಲಿ ಸ್ವಚ್ಛ ಹಾಗೂ ಅಗತ್ಯ ಕುಡಿಯುವ ನೀರನ್ನು ಪಡೆಯುವುದು ಮೂಲಭೂತ ಹಕ್ಕಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ಹಲವು ತೀರ್ಪುಗಳಲ್ಲಿ ಸ್ಪಷ್ಟಪಡಿಸಿದೆ. ಜತೆಗೆ ವಿಶ್ವಸಂಸ್ಥೆಯು 2010ರಲ್ಲಿ ಅಂಗೀಕರಿಸಿದ ನಿರ್ಣಯದಂತೆ ಪ್ರತಿಯೊಬ್ಬ ಮಾನವನಿಗೂ ಸುರಕ್ಷಿತ ಕುಡಿಯುವ ನೀರು ಪಡೆಯುವ ಮಾನವ ಹಕ್ಕಿದೆ. ಪ್ರಸ್ತುತ ಕೊಳವೆಬಾವಿಗಳನ್ನು ಸಕಾಲಕ್ಕೆ ದುರಸ್ತಿ ಮಾಡದೆ ಸಾರ್ವಜನಿಕರಿಗೆ ನೀರು ನಿರಾಕರಿಸುತ್ತಿರುವುದು ಸಂವಿಧಾನ ನೀಡಿದ ಜೀವಿಸುವ ಹಕ್ಕು ಹಾಗೂ ಮಾನವ ಹಕ್ಕುಗಳ ನೇರ ಉಲ್ಲಂಘನೆಯಾಗಿದೆ.&lt;/p&gt;&lt;h2&gt;&lt;strong&gt;ಹೆಚ್ಚು ನೀರಿರುವ ಕೊಳವೆಬಾವಿ ವಿವರ&lt;/strong&gt;&lt;/h2&gt;&lt;p&gt;ಗದಗ ಬೆಟಗೇರಿ 4, ಗಜೇಂದ್ರಗಡ 5, ಲಕ್ಷ್ಮೇಶ್ವರ 4, ನರಗುಂದ 3, ರೋಣ 4, ಮುಳಗುಂದ 3, ನರೇಗಲ್ಲ 3, ಶಿರಹಟ್ಟಿ 3 ಹೆಚ್ಚು ನೀರಿರುವ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಮುಂಡರಗಿಯಲ್ಲಿ ಯಾವುದೇ ಹೆಚ್ಚಿನ ಇಳುವರಿ ಹೊಂದಿದ ಬೋರ್&zwnj;ವೆಲ್&zwnj;ಗಳನ್ನು ಇದುವರೆಗೂ ಗುರುತಿಸಿಲ್ಲ.&lt;/p&gt;&lt;p&gt;&lt;strong&gt;ದುರಸ್ತಿ ಮಾಡಿ:&lt;/strong&gt;&lt;/p&gt;&lt;p&gt;ಪ್ರಸಕ್ತ ಮಳೆ ಕೊರತೆಯಿಂದಾಗಿ ಇರುವ ಬೋರ್&zwnj;ವೆಲ್&zwnj;ಗಳು ಬತ್ತುತ್ತಿವೆ. ಕೆಲವು ಸ್ಥಗಿತಗೊಂಡಿವೆ. ಅವುಗಳನ್ನು ದುರಸ್ತಿ ಮಾಡಿಸಬೇಕು ಇಲ್ಲವೇ ಹೆಚ್ಚು ನೀರು ಹೊಂದಿರುವ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ರೂಪದಲ್ಲಿ ಪಡೆದು ಜನರಿಗೆ ಸಕಾಲದಲ್ಲಿ ಅಗತ್ಯವಿರುವಷ್ಟು ನೀರು ಪೂರೈಕೆ ಮಾಡಬೇಕು ಎಂದು ಕಾರ್ಮಿಕ ಮುಖಂಡ ಎಂ.ಎಸ್. ಹಡಪದ ತಿಳಿಸಿದರು.&lt;/p&gt;]]></content:encoded>
            <category>gadag</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/lack-of-rain-karnataka-draught-gadag-district-237-borewells-are-fully-dry-no-water-for-drink/articleshow-nbvvxgz"/>
        </item>
        <item>
            <title><![CDATA[ಗದಗ ಬೈಪಾಸ್ ಎಫೆಕ್ಟ್? ನಾವು ಹೋಗಬೇಕಲ್ವಾ ? ನಾವೇನು ಮಾಡೋದು? ರೈಲು ಪ್ರಯಾಣಿಕರ ಆಕ್ರೋಶ]]></title>
            <link>https://kannada.asianetnews.com/karnataka-districts/indian-railways-no-16535-16536-mysuru-pandharpur-gol-gumbaz-express-diverted-from-gadag-bypass-passengers-outraged-mrq/articleshow-p4uyygi</link>
            <guid isPermaLink="true">https://kannada.asianetnews.com/karnataka-districts/indian-railways-no-16535-16536-mysuru-pandharpur-gol-gumbaz-express-diverted-from-gadag-bypass-passengers-outraged-mrq/articleshow-p4uyygi</guid>
            <pubDate>Tue, 23 Jun 2026 13:02:06 +0530</pubDate>
            <description><![CDATA[ಮೈಸೂರು-ಪಂಢರಪುರ ಗೋಲ್ ಗುಂಬಜ್ ಎಕ್ಸ್&zwnj;ಪ್ರೆಸ್ ರೈಲನ್ನು ಗದಗ ಬೈಪಾಸ್ ಮೂಲಕ ಸಂಚರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರದಿಂದ ಪಂಢರಪುರಕ್ಕೆ ಹೋಗುವ ಭಕ್ತರು ಸೇರಿದಂತೆ ಸಾವಿರಾರು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvsp1aqyprych72hgbtv30zq,imgname-gadag-railway-station-1782199659262.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಿವಕುಮಾರ ಕುಷ್ಟಗಿ&lt;/strong&gt;&lt;/p&gt;&lt;p&gt;&lt;strong&gt;ಗದಗ: &lt;/strong&gt;ವಿಜಯಪುರ, ಯಶವಂತಪುರ ನಂತರ ಈಗ ಮೈಸೂರು, ಪಂಢರಪುರ ಗೋಲ್ ಗುಂಬಜ್ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 16535/36) ಸಂಚಾರವನ್ನೂ ಗದಗ ಮತ್ತು ಹುಬ್ಬಳ್ಳಿ ಬೈಪಾಸ್ ಮೂಲಕ ಕಾರ್ಯಾಚರಣೆ ನಡೆಸಲು ರೈಲ್ವೆ ಇಲಾಖೆ ಅಣಿಯಾಗುತ್ತಿದ್ದು, ಆ ಮೂಲಕ ಗದಗ ಜಿಲ್ಲೆಯ ಜನರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯವಾಗಿದೆ.&lt;/p&gt;&lt;p&gt;ಪಂಢರಪುರದ ವಿಠ್ಠಲನ ದರ್ಶನಕ್ಕೆ ಹೋಗುವ ಸಾವಿರಾರು ಭಕ್ತರಿಗೆ ಈ ರೈಲು ಆಸರೆಯಾಗಿತ್ತು. ಆದರೆ, ಈಗ ತರಾತುರಿಯಲ್ಲಿ ಈ ರೈಲನ್ನು ಮುಖ್ಯ ನಿಲ್ದಾಣಗಳ ಬದಲಿಗೆ ಬೈಪಾಸ್ ಲೈನ್ ಮೂಲಕ ಓಡಿಸಲು ನಿರ್ಧರಿಸಿರುವುದು ಯಾವ ಉದ್ದೇಶಕ್ಕಾಗಿ ಮತ್ತು ಯಾರ ಹಿತಕ್ಕಾಗಿ ಎನ್ನುವುದನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಬೇಕಿದೆ.&lt;/p&gt;&lt;p&gt;ಇತ್ತೀಚೆಗಷ್ಟೇ ಆರಂಭವಾದ ವಿಜಯಪುರ, ಯಶವಂತಪುರ ರೈಲು ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಸಂಚರಿಸುವಾಗ ಗದಗ ಬೈಪಾಸ್ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿತ್ತು. ನಂತರದ ದಿನಗಳಲ್ಲಿ ಅದನ್ನು ರದ್ದುಗೊಳಿಸಿದ್ದ ಇಲಾಖೆ ಈಗ ಪಂಢರಪುರ, ಮೈಸೂರು ರೈಲಿಗೆ ಗದಗ ಮತ್ತು ಹುಬ್ಬಳ್ಳಿ ಬೈಪಾಸ್ ನಲ್ಲಿ ಮಾತ್ರ ನಿಲುಗಡೆಗೆ ಅವಕಾಶ ನೀಡಿದೆ. ಆದರೆ, ಬೈಪಾಸ್ ರೈಲು ನಿಲ್ದಾಣಗಳಿಗೆ ತಲುಪಲು ಸಾರ್ವಜನಿಕರಿಗೆ ಸಾಧ್ಯವಾಗದ ಸ್ಥಿತಿ ಇದೆ. ಇದು ಇಲಾಖೆ ಅಧಿಕಾರಿಗಳಿಗೆ ಯಾಕೆ ಗೊತ್ತಾಗುತ್ತಿಲ್ಲ ಎನ್ನುವುದು ಆಶ್ಚರ್ಯದ ಸಂಗತಿಯಾಗಿದೆ.&lt;/p&gt;&lt;h2&gt;&lt;strong&gt;ಕಿಂಚಿತ್ತು ಗಮನ ನೀಡದ ಸಂಸದರು&lt;/strong&gt;&lt;/h2&gt;&lt;p&gt;ಹಾವೇರಿ-ಗದಗ ಸಂಸದರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ ರೈಲು ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಸಿಗುತ್ತದೆ. ಇವರು ಮಾಜಿ ಸಿಎಂ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಪ್ರಧಾನಿ ಮೋದಿ ಅವರೊಂದಿಗೆ ಬೊಮ್ಮಾಯಿ ಅತ್ಯಂತ ಆತ್ಮೀಯ ಸಂಪರ್ಕ ಹೊಂದಿದ್ದಾರೆ. ಇದನ್ನು ಬಳಕೆ ಮಾಡಿಕೊಂಡು ಗದಗ ಜಿಲ್ಲೆಯ ಜನತೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಾರೆ ಎನ್ನುವ ವಿಶ್ವಾಸದಲ್ಲಿದ್ದರು ಜಿಲ್ಲೆಯ ಜನತೆ. ಸಧ್ಯ ಸಂಸದರು ಜಿಲ್ಲೆಯ ರೈಲು ಬಳಕೆದಾರರ ಸಮಸ್ಯೆಗಳಿಗೆ ಕಿಂಚಿತ್ತೂ ಗಮನ ನೀಡುತ್ತಿಲ್ಲ ಎನ್ನುವ ಬೇಸರ ಜನ ವ್ಯಕ್ತಪಡಿಸುತ್ತಾರೆ.&lt;/p&gt;&lt;p&gt;ಗದಗ ಬೈಪಾಸ್ ನಿಲ್ದಾಣದಲ್ಲಿ ಯಾವುದೇ ಪ್ರಯಾಣಿಕ ರೈಲುಗಳನ್ನು ನಿಲ್ಲಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಆರಂಭದಿಂದಲೂ ಜನರಿಗೆ ಭರವಸೆ ನೀಡುತ್ತ ಬಂದಿತ್ತು. ವಿಜಯಪುರ-ಯಶವಂತಪುರ ರೈಲು ಸಂಚಾರದ ವೇಳೆಯೂ ಇದೇ ಮಾತನ್ನು ಪುನರುಚ್ಚರಿಸಿತ್ತು. ಆದರೆ, ಕೊಟ್ಟ ಮಾತಿಗೆ ತಪ್ಪಿ ಕೆಲವೇ ದಿನಗಳಲ್ಲಿ ಹೊಸ ರೈಲನ್ನು ಇದೇ ಮಾರ್ಗದಲ್ಲಿ ಓಡಿಸುತ್ತಿದೆ. ಇದರಿಂದ ಕೇವಲ ಗದಗ ಜಿಲ್ಲೆ ಮಾತ್ರವಲ್ಲ ಅಕ್ಕ ಪಕ್ಕದ ಜಿಲ್ಲೆಯ ನಿತ್ಯವೂ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ರೈಲ್ವೆ ಹೋರಾಟಗಾರ ಗಣೇಶಸಿಂಗ್ ಬ್ಯಾಳಿ ಹೇಳಿದರು.&lt;/p&gt;&lt;p&gt;ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರೈಲ್ವೆ ಮಂಡಳಿ ಆದೇಶ ಈಗಷ್ಟೆ ಬಂದಿದೆ ಎಂದು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ಪಿ.ಆರ್.ಓ. ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-no-16535-16536-mysuru-pandharpur-gol-gumbaz-express-diverted-from-gadag-bypass-passengers-outraged-mrq/articleshow-p4uyygi"/>
        </item>
        <item>
            <title><![CDATA[ಸಿಎಂ ಡಿಕೆ ಶಿವಕುಮಾರ್‌ಗೆ ರಂಭಾಪುರಿ ಶ್ರೀಗಳ ಮೇಲೇಕೆ ಅಷ್ಟೊಂದು ಭಕ್ತಿ?: ರಹಸ್ಯ ಬಿಚ್ಚಿಟ್ಟ ಜಗದ್ಗುರುಗಳು!]]></title>
            <link>https://kannada.asianetnews.com/gadag/dk-shivakumar-rambhapuri-mutt-secret-revealed-by-vireeshwara-swamiji-gadag-san/articleshow-tdkq05g</link>
            <guid isPermaLink="true">https://kannada.asianetnews.com/gadag/dk-shivakumar-rambhapuri-mutt-secret-revealed-by-vireeshwara-swamiji-gadag-san/articleshow-tdkq05g</guid>
            <pubDate>Tue, 21 Jul 2026 21:58:40 +0530</pubDate>
            <description><![CDATA[&lt;p&gt;ಸಿಎಂ ಡಿ.ಕೆ. ಶಿವಕುಮಾರ್ ಅವರ ರಂಭಾಪುರಿ ಪೀಠದ ಮೇಲಿನ ಅಪಾರ ಭಕ್ತಿಗೆ ಕಾರಣವನ್ನು ಹಾಲಿ ರಂಭಾಪುರಿ ಶ್ರೀಗಳು ಬಹಿರಂಗಪಡಿಸಿದ್ದಾರೆ. ಬಾಲ್ಯದಲ್ಲಿ ಡಿ.ಕೆ. ಶಿವಕುಮಾರ್&zwnj;ಗೆ ಅವರ ಬಾಲ್ಯದ ಘಟನೆಯನ್ನು ಅವರು ತಿಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ky2r0r1334qgmxsf1qzfha8b,imgname-rambhapuri-swamiji-on-dk-shivakumar-1784651210786.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ (ಜು.21): &lt;/strong&gt;ಸಿಎಂ ಡಿಕೆ. ಶಿವಕುಮಾರ್ ಅವರಿಗೆ ಶ್ರೀ ರಂಭಾಪುರಿ ಪೀಠ ಮತ್ತು ವೀರಗಂಗಾಧರ ಶ್ರೀಗಳ ಮೇಲೆ ಇರುವ ಅಪಾರ ಭಕ್ತಿ-ಗೌರವದ ಹಿಂದಿರುವ ರೋಚಕ ರಹಸ್ಯವೊಂದನ್ನು ರಂಭಾಪುರಿ ಜಗದ್ಗುರು ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಗದಗದಲ್ಲಿ ಬಿಚ್ಚಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಾವು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲೂ ರಂಭಾಪುರಿ ಪೀಠದ ಪೂರ್ವಾಚಾರ್ಯರಾದ ಶ್ರೀ ವೀರಗಂಗಾಧರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದರು. ಒಕ್ಕಲಿಗ ಸಮುದಾಯದ ನಾಯಕರಾಗಿರುವ ಡಿಕೆಶಿಗೆ ವೀರಶೈವ ಲಿಂಗಾಯತ ಪರಂಪರೆಯ ರಂಭಾಪುರಿ ಪೀಠದ ಮೇಲೇಕೆ ಈ ಮಟ್ಟದ ಭಕ್ತಿ ಎಂಬ ಕುತೂಹಲಕ್ಕೆ ರಂಭಾಪುರಿ ಶ್ರೀಗಳು ತೆರೆ ಎಳೆದಿದ್ದಾರೆ.&lt;/p&gt;&lt;h2&gt;&lt;strong&gt;ಬಾಲ್ಯದಲ್ಲಿ ತಾಯಿ ಹೊಡೆಯುವಾಗ ತಡೆದಿದ್ದ ಶ್ರೀಗಳು!&lt;/strong&gt;&lt;/h2&gt;&lt;p&gt;ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಚಿಕ್ಕವರಿದ್ದಾಗ, ಅವರ ತಾಯಿ ಯಾವುದೋ ವಿಷಯಕ್ಕೆ ಸಿಟ್ಟು ಮಾಡಿಕೊಂಡು ಅವರಿಗೆ ಹೊಡೆಯಲು ಮುಂದಾಗಿದ್ದರು. ಆ ಸಮಯದಲ್ಲಿ ಆ ಜಾಗದಲ್ಲೇ ಇದ್ದ ರಂಭಾಪುರಿ ಪೀಠದ ಪೂರ್ವಾಚಾರ್ಯರಾದ ಶ್ರೀ ವೀರಗಂಗಾಧರ ಶ್ರೀಗಳು ತಕ್ಷಣವೇ ಮಧ್ಯಪ್ರವೇಶಿಸಿ, &quot;ಆ ಮಗುವಿಗೆ ಹೊಡೆಯಬೇಡಿ&quot; ಎಂದು ತಾಯಿಯನ್ನು ತಡೆದಿದ್ದರು.&lt;/p&gt;&lt;p&gt;ಅಂದು ಮಗುವಾಗಿದ್ದ ಡಿಕೆಶಿಯವರನ್ನು ತಡೆದ ಶ್ರೀಗಳು, ತಾಯಿಗೆ ಅಭಯ ನೀಡುತ್ತಾ, &quot;ಈ ಮಗುವನ್ನು ಹೊಡೆಯಬೇಡಿ, ಈತ ಮುಂದೆ ದೊಡ್ಡ ಸ್ಥಾನವನ್ನು ಅಲಂಕರಿಸುತ್ತಾನೆ. ಈತ ಭಾರಿ ಹಠವಾದಿ ಹಾಗೂ ಚಲವಾದಿ. ತನ್ನ ಜೀವನದಲ್ಲಿ ಅತ್ಯಂತ ಉತ್ತಮ ಶ್ರೇಯಸ್ಸು ಮತ್ತು ಉನ್ನತ ಹಂತವನ್ನು ತಲುಪುತ್ತಾನೆ&quot; ಎಂದು ಭವಿಷ್ಯ ನುಡಿದು ಆಶೀರ್ವಾದ ಮಾಡಿದ್ದರು.&lt;/p&gt;&lt;h2&gt;&lt;strong&gt;ಭಾವಚಿತ್ರಕ್ಕೆ ನಮಿಸದೇ ಯಾವುದೇ ಕೆಲಸ ಆರಂಭಿಸೋದಿಲ್ಲ ಡಿಕೆಶಿ&lt;/strong&gt;&lt;/h2&gt;&lt;p&gt;ಶ್ರೀಗಳ ಆ ನುಡಿಗಳು ಡಿಕೆಶಿಯವರ ಜೀವನದಲ್ಲಿ ಸತ್ಯವಾಗಿ ಪರಿಣಮಿಸಿವೆ. ಹೀಗಾಗಿ, ಡಿ.ಕೆ. ಶಿವಕುಮಾರ್ ಅವರು ಶ್ರೀ ವೀರಗಂಗಾಧರ ಶ್ರೀಗಳ ಭಾವಚಿತ್ರವಿಲ್ಲದೆ ಮತ್ತು ಅವರಿಗೆ ಮನಸ್ಸಿನಲ್ಲೇ ನಮಿಸದೇ ಯಾವುದೇ ಪ್ರಮುಖ ಕಾರ್ಯವನ್ನು ಆರಂಭಿಸುವುದಿಲ್ಲ. ಸ್ವತಃ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರೇ ಶ್ರೀಗಳ ಭಾವಚಿತ್ರವನ್ನು ಇಟ್ಟುಕೊಂಡಿರುವುದನ್ನು ನಾನು ಕಂಡಿಲ್ಲ, ಆದರೆ ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿಕೆ ಶಿವಕುಮಾರ್ ಅವರು ರಂಭಾಪುರಿ ಶ್ರೀಗಳಿಗೆ ಈ ಮಟ್ಟದ ಗೌರವ ಸಲ್ಲಿಸುವುದು ನಿಜಕ್ಕೂ ವಿಶೇಷ ಎಂದು ಹಾಲಿ ರಂಭಾಪುರಿ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;&lt;strong&gt;ಸಂಕಷ್ಟ ಬಂದಾಗ ನೆನೆದರೆ ಮಂಜಿನಂತೆ ಕರಗುವ ಸಮಸ್ಯೆಗಳು&lt;/strong&gt;&lt;/h2&gt;&lt;p&gt;ತಮ್ಮ ಜೀವನದಲ್ಲಿ ಯಾವುದೇ ರೀತಿಯ ಕಷ್ಟ, ಸವಾಲು ಅಥವಾ ತೊಂದರೆಗಳು ಎದುರಾದಾಗ ಡಿಕೆ ಶಿವಕುಮಾರ್ ಅವರು ರಂಭಾಪುರಿ ಶ್ರೀಗಳನ್ನು ನೆನೆದರೆ ಸಾಕು, ಆ ಎಲ್ಲಾ ಸಮಸ್ಯೆಗಳು ಮಂಜಿನಂತೆ ಕರಗಿಹೋಗುತ್ತವೆ. ಇದು ಅವರ ಜೀವನದಲ್ಲಿ ನಡೆದಿರುವ ಅಕ್ಷರಶಃ ಸತ್ಯವಾಗಿದೆ. ಇದೇ ಕಾರಣಕ್ಕಾಗಿ ರಂಭಾಪುರಿ ಪೀಠ ಎಂದರೆ ಅವರಿಗೆ ಅತ್ಯಂತ ಅಚ್ಚುಮೆಚ್ಚು ಹಾಗೂ ಪೂಜ್ಯ ಭಾವನೆ ಎಂದು ರಂಭಾಪುರಿ ಜಗದ್ಗುರುಗಳು ತಿಳಿಸಿದ್ದಾರೆ.&lt;/p&gt;&lt;p&gt;&lt;/p&gt;]]></content:encoded>
            <category>gadag</category>
            <dc:creator>Santosh Naik</dc:creator>
            <atom:link href="https://kannada.asianetnews.com/gadag/dk-shivakumar-rambhapuri-mutt-secret-revealed-by-vireeshwara-swamiji-gadag-san/articleshow-tdkq05g"/>
        </item>
        <item>
            <title><![CDATA[33 ದಿನ ಯೋಗಸಮಾಧಿಗೆ ಹೋಗಿದ್ದ ರಾಚೋಟೇಶ್ವರ ಶ್ರೀಗಳ ಆರೋಗ್ಯ ಹೇಗಿದೆ? ವೈದ್ಯರಿಂದ ಮಾಹಿತಿ]]></title>
            <link>https://kannada.asianetnews.com/karnataka-districts/gadag-how-is-the-health-of-rachoteshwar-sri-who-went-to-yoga-samadhi-for-33-days-information-from-the-doctor-mrq/articleshow-tixtcok</link>
            <guid isPermaLink="true">https://kannada.asianetnews.com/karnataka-districts/gadag-how-is-the-health-of-rachoteshwar-sri-who-went-to-yoga-samadhi-for-33-days-information-from-the-doctor-mrq/articleshow-tixtcok</guid>
            <pubDate>Tue, 07 Jul 2026 08:10:34 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯ ಡಾ.ರಾಚೋಟೇಶ್ವರ ಸ್ವಾಮೀಜಿ ಅವರು 33 ದಿನಗಳ ಶಿವಯೋಗ ಸಮಾಧಿ ಅನುಷ್ಠಾನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwrsgvt2g0avn5wg03e4j59a,imgname-gadag-swamiji---3--1783243501378.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ: &lt;/strong&gt;ಸತತ 33 ದಿನಗಳ ಕಾಲ ಶಿವಯೋಗ ಸಮಾಧಿ ಅನುಷ್ಠಾನ ಕೈಗೊಂಡು ಪೂರ್ಣಗೊಳಿಸಿರುವ ಗದಗ ಜಿಲ್ಲೆಯ ಅಂತೂರ- ಬೆಂತೂರ ಗ್ರಾಮದ ಬೂದೀಶ್ವರ ಮಠದ ಡಾ.ರಾಚೋಟೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಗದಗ ಆಸ್ಪತ್ರೆಯಿಂದಲೇ ವೀಡಿಯೋ ಸಂದೇಶದ ಮೂಲಕ ಭಕ್ತರಿಗೆ ಧೈರ್ಯ ತುಂಬಿದ್ದಾರೆ.&lsquo;ಯಾರೂ ಆತಂಕಪಡುವ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ&rsquo; ಎಂದಿದ್ದಾರೆ. ಸುದೀರ್ಘ ಯೋಗಸಮಾಧಿಯ ಬಳಿಕವೂ ಸ್ವಾಮೀಜಿ ದೇಹದ ಸ್ಥಿತಿ ಸಹಜವಾಗಿರುವುದು ವೈದ್ಯರನ್ನು ಅಚ್ಚರಿಗೊಳಿಸಿದೆ ಎನ್ನಲಾಗಿದೆ.&lt;/p&gt;&lt;p&gt;ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲ ಭಕ್ತರು ನೆಮ್ಮದಿಯಿಂದಿರಿ&rsquo; ಎಂದು ಮನವಿ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ&lt;/strong&gt;&lt;/h2&gt;&lt;p&gt;ಅಗತ್ಯ ಚಿಕಿತ್ಸೆ ಬಳಿಕ ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗುವ ನಿರೀಕ್ಷೆ ಇದೆ . ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಮಾತನಾಡಿ, ಸ್ವಾಮೀಜಿ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತೀವ್ರ ನಿಗಾಘಟಕದಲ್ಲಿರಿಸಿ ಸಲೈನ್ ನೀಡಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ.&lt;/p&gt;&lt;h3&gt;&lt;strong&gt;ಲೋಕ ಕಲ್ಯಾಣಕ್ಕಾಗಿ ಯೋಗಸಮಾಧಿ&lt;/strong&gt;&lt;/h3&gt;&lt;p&gt;ಮಹದಾಯಿ ಯೋಜನೆ ಜಾರಿ ಸೇರಿದಂತೆ ಜಗತ್ತಿನ ಕಲ್ಯಾಣಕ್ಕಾಗಿ ಜೂನ್ 3ರ ಮಧ್ಯರಾತ್ರಿ ಗದಗದ ಜಿಲ್ಲೆಯಲ್ಲಿರುವ ರಾಚೂಟೇಶ್ವರ ಸ್ವಾಮೀಜಿಯವರು ಸಮಾಧಿ ಸ್ಥಿತಿಗೆ ಹೋಗಿದ್ದರು. 33 ದಿನಗಳ ಬಳಿಕ ಸಮಾಧಿಯಿಂದ ಹೊರಗೆ ಬಂದು ಭಕ್ತರಿಗೆ ದರ್ಶನ ನೀಡಿದ್ದಾರೆ. ಅನ್ನ, ನೀರು, ಗಾಳಿ ಮತ್ತು ಬೆಳಕಿಲ್ಲದೆ ಸತತ 775 ಗಂಟೆಗಳ ಕಾಲ ಸ್ವಾಮೀಜಿಗಳು ಯೋಗಸಮಾಧಿಯಲ್ಲಿದ್ದರು ಎಂದು ಭಕ್ತರು ಹೇಳುತ್ತಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/gadag-how-is-the-health-of-rachoteshwar-sri-who-went-to-yoga-samadhi-for-33-days-information-from-the-doctor-mrq/articleshow-tixtcok"/>
        </item>
        <item>
            <title><![CDATA[Gadag ನಿಲ್ದಾಣದಲ್ಲಿ ಶೇಂಗಾ ಮಾರೋ ತಿಪ್ಪಮ್ಮ ಅಜ್ಜಿಯ ಆದಾಯ, ಮಾಡಿದ ಆಸ್ತಿ ಎಷ್ಟು?]]></title>
            <link>https://kannada.asianetnews.com/gallery/karnataka-districts/gadag-how-much-is-the-income-and-assets-of-thippamma-ajji-who-sells-peanuts-at-junction-railway-station-mrq-w22lg8m</link>
            <guid isPermaLink="true">https://kannada.asianetnews.com/gallery/karnataka-districts/gadag-how-much-is-the-income-and-assets-of-thippamma-ajji-who-sells-peanuts-at-junction-railway-station-mrq-w22lg8m</guid>
            <pubDate>Thu, 27 Aug 2026 14:01:48 +0530</pubDate>
            <description><![CDATA[&lt;p&gt;Gadag Railway Station: ಬೆಟಗೇರಿಯ ತಿಪ್ಪಮ್ಮ ಅಜ್ಜಿ ಕಳೆದ 30 ವರ್ಷಗಳಿಂದ ಗದಗ ರೈಲು ನಿಲ್ದಾಣದಲ್ಲಿ ಶೇಂಗಾ, ಹುರಿಗಡಲೆ ಮಾರಾಟ ಮಾಡುತ್ತಿದ್ದಾರೆ. ಪತಿಯ ನಿಧನದ ನಂತರ ಕುಟುಂಬದ ಜವಾಬ್ದಾರಿ ಹೊತ್ತು, ಇಂದಿಗೂ ಸ್ವಾಭಿಮಾನದಿಂದ ಕೆಲಸ ಮಾಡುತ್ತಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m1150drtk9bkarez8m4czpct,imgname-gadag--3--1787818948378.jpg" type="image/jpeg" height="390" width="690"/>
            <content:encoded><![CDATA[&lt;p&gt;Gadag Railway Station: ಬೆಟಗೇರಿಯ ತಿಪ್ಪಮ್ಮ ಅಜ್ಜಿ ಕಳೆದ 30 ವರ್ಷಗಳಿಂದ ಗದಗ ರೈಲು ನಿಲ್ದಾಣದಲ್ಲಿ ಶೇಂಗಾ, ಹುರಿಗಡಲೆ ಮಾರಾಟ ಮಾಡುತ್ತಿದ್ದಾರೆ. ಪತಿಯ ನಿಧನದ ನಂತರ ಕುಟುಂಬದ ಜವಾಬ್ದಾರಿ ಹೊತ್ತು, ಇಂದಿಗೂ ಸ್ವಾಭಿಮಾನದಿಂದ ಕೆಲಸ ಮಾಡುತ್ತಾರೆ.&lt;/p&gt;&lt;img&gt;&lt;p&gt;ಗದಗ ಮಾರ್ಗವಾಗಿ ಅಥವಾ ಈ ರೈಲು ನಿಲ್ದಾಣದಿಂದ ನೀವು ಪ್ರಯಾಣ ಮಾಡುತ್ತಿದ್ದರೆ ನೀವು ಖಂಡಿತ ಈ ಅಜ್ಜಿಯನ್ನು ನೋಡಿರುತ್ತೀರಿ. ಪ್ಲಾಟ್&zwnj;ಫಾರಂ ಮೂರರ ಮೆಟ್ಟಿಲ ಬಳಿ ಕುಳಿತುಕೊಳ್ಳುವ ಈ ಅಜ್ಜಿ, ಶೇಂಗಾ, ಹುರಿಗಡಲೆ, ಬಟಾಣಿ, ಸೂರ್ಯಕಾಂತಿ ಮಾರಾಟ ಮಾಡುತ್ತಾರೆ. ಸದ್ಯ ಈ ಅಜ್ಜಿಯ ಸಂದರ್ಶನವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಅಜ್ಜಿ ಯಾರು? ಎಲ್ಲಿಯವರು? ಇವರ ದಿನದ ಆದಾಯ ಎಷ್ಟು ಎಂಬುದನ್ನು ನೋಡೋಣ ಬನ್ನಿ.&lt;/p&gt;&lt;img&gt;&lt;p&gt;ಈ ಅಜ್ಜಿಯ ಹೆಸರು ತಿಪ್ಪಮ್ಮ, ಬೆಟಗೇರಿಯ ನಿವಾಸಿ. ಕಳೆದ ಮೂವತ್ತು ವರ್ಷಗಳಿಂದ ಗದಗ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದಾರೆ. ಗಂಡನ ನಿಧನದ ಬಳಿಕ ಕುಟುಂಬದ ಜವಾಬ್ದಾರಿಯೆಲ್ಲಾ ತಿಪ್ಪಮ್ಮ ಅವರ ಮೇಲೆ ಬಿತ್ತು. ಅಂದು ಊರಿನಲ್ಲಿಯೇ ಕೂಲಿ ಕೆಲಸ ಮಾಡಿದ್ರೆ ದಿನಕ್ಕೆ 25 ರಿಂದ 50 ಪೈಸೆ ಸಿಗುತ್ತಿತ್ತು. ಇಷ್ಟು ಹಣದಿಂದ ಮಕ್ಕಳ ಹೊಟ್ಟೆ ತುಂಬಿಸಲು ಆಗಲ್ಲ ಎಂದು ತಿಳಿದ ತಿಪ್ಪಮ್ಮಜ್ಜಿ ತಮ್ಮೂರಿನ ಮಹಿಳೆಯ ಸಹಾಯದಿಂದ ವ್ಯಾಪಾರಕ್ಕಾಗಿ ಗದಗ ನಗರಕ್ಕೆ ಬರುತ್ತಾರೆ.&lt;/p&gt;&lt;img&gt;&lt;p&gt;ವ್ಯಾಪಾರ ಆರಂಭಿಸಿದಾಗ ಊರಿನವರು ಏನಾದ್ರೆ ಅಂದ್ರೆ ಹೇಗೆ ಎಂಬ ಭಯವಿತ್ತು. ಒಂದು ದಿನ ನಮ್ಮೂರಿನ ಹಿರಿಯ ವ್ಯಕ್ತಿ ಇಲ್ಲಿಯೇ ಬಂದ್ರು. ಭಯದಿಂದ ಚೀಲ, ಪುಟ್ಟಿಯನ್ನು ಎತ್ಕೊಂಡು ಒಂದ್ಕೆಡೆ ಕುಳಿತೆ. ಆಗ ನನ್ನ ಬಳಿಗೆ ಬಂದ ಅವರು, ಯಾಕೆ ಹೆದರುತ್ತೀಯಾ? ನ್ಯಾಯವಾಗಿ ವ್ಯಾಪಾರ ಮಾಡುತ್ತಿದ್ದೀಯಾ. ವ್ಯಾಪಾರ ಮುಂದುವರಿಸುವಂತೆ ಪ್ರೋತ್ಸಾಹಿಸಿದರು. ಅಂದಿನಿಂದ ಧೈರ್ಯವಾಗಿ ವ್ಯಾಪಾರ ಮಾಡುತ್ತಿದ್ದೇನೆ ಎಂದು ತಿಪ್ಪಮ್ಮಾ ಅಜ್ಜಿ ಹೇಳುತ್ತಾರೆ.&lt;/p&gt;&lt;img&gt;&lt;p&gt;ಸುಮಾರು 75 ರಿಂದ 80 ವಯಸ್ಸಿನ ತಿಪ್ಪಮ್ಮಾ ಅಜ್ಜಿ, ಈ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ಇಂದು ತಿಪ್ಪಮ್ಮಾ ಅಜ್ಜಿ ದಿನಕ್ಕೆ 200 ರಿಂದ 300 ರೂಪಾಯಿ ಸಂಪಾದನೆ ಮಾಡುತ್ತಾರೆ. ಪ್ರತಿದಿನ ಮೊಮ್ಮಗ ನಿಲ್ದಾಣಕ್ಕೆ ಕರೆದುಕೊಂಡು ಬರುತ್ತಾನೆ. ಸಂಜೆ ಬಂದು ಕರೆದುಕೊಂಡು ಹೋಗುತ್ತಾರೆ. ಮೊಮ್ಮಕ್ಕಳು, ಸೊಸೆ ಎಲ್ಲರೂ ಒಳ್ಳೆಯವರು. ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳೋದಕ್ಕಿಂತ ಇಲ್ಲಿಗೆ ಬಂದು ವ್ಯಾಪಾರ ಮಾಡುತ್ತೇನೆ ಎಂದು ಅಜ್ಜಿ ಹೇಳುತ್ತಾರೆ.&lt;/p&gt;&lt;img&gt;&lt;p&gt;ಇನ್ನು ರೈಲು ನಿಲ್ದಾಣದಲ್ಲಿ ಅನುಮತಿ ಇಲ್ಲದೇ ವ್ಯಾಪಾರ ಮಾಡುವಂತಿಲ್ಲ. ಆದ್ರೂ ಈ ತಿಪ್ಪಮ್ಮಾ ಅಜ್ಜಿಗೆ ಗದಗ ರೈಲು ನಿಲ್ದಾಣದ ಪೊಲೀಸರು ಯಾವುದೇ ರೀತಿಯಲ್ಲಿ ಅಡ್ಡಿಯನ್ನುಂಟು ಮಾಡಿಲ್ಲ. ಈ ವ್ಯಾಪಾರದಿಂದ ಯಾವುದೇ ಆಸ್ತಿಯನ್ನು ಮಾಡಿಕೊಂಡಿಲ್ಲಪ್ಪ. ಮಕ್ಕಳು-ಮೊಮ್ಮಕ್ಕಳನ್ನು ಓದಿಸಿದ್ದೇನೆ. ಮೊಮ್ಮಗನೇ ಮಾರುಕಟ್ಟೆಗೆ ಹೋಗಿ ಈ ವಸ್ತುಗಳನ್ನು ತೆಗೆದುಕೊಂಡು ಬರುತ್ತಾನೆ.&lt;/p&gt;&lt;p&gt;ಸೊಸೆ ಬೆಳಗ್ಗೆ ಬುತ್ತಿ ಮಾಡಿ ಕಳಿಸುತ್ತಾಳೆ. ಇರೋ ಒಬ್ಬನು ಮಗ ಸತ್ತ. ಮಲಗಿದ್ದಲ್ಲಿಯೇ ಸಾವು ಬರಬೇಕು ಅನ್ನೋದು ನನ್ನ ಕೊನೆಯ ಆಸೆ ಎಂದು ತಿಪ್ಪಮ್ಮಾ ಅಜ್ಜಿ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಅಂದು ಮನೆಗಾಗಿ 1 ಹಸು ಖರೀದಿ, ಇಂದು 100 ಎಮ್ಮೆಗಳ ಒಡತಿ ಕಲಬುರಗಿ ಮಹಿಳೆ; Dairy Farming&lt;/strong&gt;&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/gadag-how-much-is-the-income-and-assets-of-thippamma-ajji-who-sells-peanuts-at-junction-railway-station-mrq-w22lg8m"/>
        </item>
        <item>
            <title><![CDATA[33 ದಿನಗಳ ಬಳಿಕ ಸಮಾಧಿಯಿಂದ ಹೊರಬಂದು ದರ್ಶನ ನೀಡಿದ ಸ್ವಾಮೀಜಿ; 775 ಗಂಟೆಯ ಯೋಗಸಮಾಧಿ]]></title>
            <link>https://kannada.asianetnews.com/gallery/karnataka-districts/gadag-swamiji-came-out-of-samadhi-and-gave-darshan-after-33-days-775-hours-of-yoga-samadhi-mrq-w7xc0ik</link>
            <guid isPermaLink="true">https://kannada.asianetnews.com/gallery/karnataka-districts/gadag-swamiji-came-out-of-samadhi-and-gave-darshan-after-33-days-775-hours-of-yoga-samadhi-mrq-w7xc0ik</guid>
            <pubDate>Sun, 05 Jul 2026 14:57:11 +0530</pubDate>
            <description><![CDATA[ಗದಗ ಜಿಲ್ಲೆಯ ರಾಚೂಟೇಶ್ವರ ಸ್ವಾಮೀಜಿಯವರು ಮಹದಾಯಿ ಯೋಜನೆ ಮತ್ತು ಲೋಕ ಕಲ್ಯಾಣಕ್ಕಾಗಿ 33 ದಿನಗಳ ಕಾಲ ಯೋಗಸಮಾಧಿಯಲ್ಲಿದ್ದರು. ಅನ್ನ, ನೀರು, ಗಾಳಿ, ಬೆಳಕಿಲ್ಲದೆ 775 ಗಂಟೆಗಳ ಕಠಿಣ ಅನುಷ್ಠಾನದ ನಂತರ, ಅವರು ಸಮಾಧಿಯಿಂದ ಯಶಸ್ವಿಯಾಗಿ ಹೊರಬಂದು ಭಕ್ತರಿಗೆ ದರ್ಶನ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwrsgvt2g0avn5wg03e4j59a,imgname-gadag-swamiji---3--1783243501378.jpg" type="image/jpeg" height="390" width="690"/>
            <content:encoded><![CDATA[ಗದಗ ಜಿಲ್ಲೆಯ ರಾಚೂಟೇಶ್ವರ ಸ್ವಾಮೀಜಿಯವರು ಮಹದಾಯಿ ಯೋಜನೆ ಮತ್ತು ಲೋಕ ಕಲ್ಯಾಣಕ್ಕಾಗಿ 33 ದಿನಗಳ ಕಾಲ ಯೋಗಸಮಾಧಿಯಲ್ಲಿದ್ದರು. ಅನ್ನ, ನೀರು, ಗಾಳಿ, ಬೆಳಕಿಲ್ಲದೆ 775 ಗಂಟೆಗಳ ಕಠಿಣ ಅನುಷ್ಠಾನದ ನಂತರ, ಅವರು ಸಮಾಧಿಯಿಂದ ಯಶಸ್ವಿಯಾಗಿ ಹೊರಬಂದು ಭಕ್ತರಿಗೆ ದರ್ಶನ ನೀಡಿದ್ದಾರೆ.&lt;img&gt;&lt;p&gt;ಮಹದಾಯಿ ಯೋಜನೆ ಜಾರಿ ಸೇರಿದಂತೆ ಜಗತ್ತಿನ ಕಲ್ಯಾಣಕ್ಕಾಗಿ ಜೂನ್ 3ರ ಮಧ್ಯರಾತ್ರಿ ಗದಗದ ಜಿಲ್ಲೆಯಲ್ಲಿರುವ ರಾಚೂಟೇಶ್ವರ ಸ್ವಾಮೀಜಿಯವರು ಸಮಾಧಿ ಸ್ಥಿತಿಗೆ ಹೋಗಿದ್ದರು. 33 ದಿನಗಳ ಬಳಿಕ ಸಮಾಧಿಯಿಂದ ಹೊರಗೆ ಬಂದು ಭಕ್ತರಿಗೆ ದರ್ಶನ ನೀಡಿದ್ದಾರೆ. ಅನ್ನ, ನೀರು, ಗಾಳಿ ಮತ್ತು ಬೆಳಕಿಲ್ಲದೆ ಸತತ 775 ಗಂಟೆಗಳ ಕಾಲ ಸ್ವಾಮೀಜಿಗಳು ಯೋಗಸಮಾಧಿಯಲ್ಲಿದ್ದರು ಎಂದು ಭಕ್ತರು ಹೇಳುತ್ತಿದ್ದಾರೆ.&lt;/p&gt;&lt;img&gt;&lt;p&gt;ಸಿಮೆಂಟ್&zwnj;ನಿಂದ ಸಂಪೂರ್ಣವಾಗಿ ಪ್ಯಾಕ್ ಮಾಡಲಾಗಿದ್ದ ಕಲ್ಲಿನ ಮಂಟಪದೊಳಗೆ ಸ್ವಾಮೀಜಿಯವರು 33 ದಿನಗಳ ಕಾಲ ಕಳೆದಿದ್ದಾರೆ. ಇಂದು ಆ 33 ದಿನಗಳ ಶಿವಯೋಗ ಸಮಾಧಿ ಅಂತ್ಯಗೊಂಡಿದ್ದು, ಸ್ವಾಮೀಜಿಯವರು ಸಮಾಧಿಯಿಂದ ಯಶಸ್ವಿಯಾಗಿ ಆಚೆ ಬಂದಿದ್ದಾರೆ. ಸಮಾಧಿಯಿಂದ ಹೊರಬಂದ ನಂತರ ಅಭ್ಯಂಗ (ಸ್ನಾನ) ಮುಗಿಸಿ, ಅಪಾರ ಭಕ್ತ ಸಮೂಹಕ್ಕೆ ರಾಚೂಟೇಶ್ವರ ಸ್ವಾಮೀಜಿಯವರು ದರ್ಶನ ನೀಡಿದರು.&lt;/p&gt;&lt;img&gt;&lt;p&gt;ಮೊದಲು ನಮಗೆ ತುಂಬಾ ಆತಂಕ ಇತ್ತು. ಆದ್ರೀಗ ಸ್ವಾಮಿಗಳನ್ನು ಜೀವಂತವಾಗಿ ಮತ್ತು ಆರೋಗ್ಯವಾಗಿ ನೋಡಿ ತುಂಬಾ ಖುಷಿಯಾಗುತ್ತಿದೆ ಎಂದು ಗ್ರಾಮಸ್ಥರು ಭಾವುಕರಾಗಿ ನುಡಿದಿದ್ದಾರೆ. ಸ್ವಾಮೀಜಿಯವರು ಈ ಹಿಂದೆಯೂ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನಗಳನ್ನು ಮಾಡಿದ್ದರಾದರೂ, ಇಷ್ಟು ಸುದೀರ್ಘವಾಗಿ (33 ದಿನಗಳ ಕಾಲ) ಸಮಾಧಿಯಾಗಿದ್ದು ಇದೇ ಮೊದಲ ಬಾರಿ.&lt;/p&gt;&lt;img&gt;&lt;p&gt;ಈ ಯೋಗದ ಅಚ್ಚರಿಯನ್ನು ಕಣ್ತುಂಬಿಕೊಳ್ಳಲು ಮತ್ತು ಸ್ವಾಮಿಗಳ ದರ್ಶನ ಪಡೆಯಲು ತೆಲಂಗಾಣ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಗದಗ ತಾಲೂಕಿನ ಅಂತೂರು ಬೆಂತೂರು ಗ್ರಾಮದ ಬೂದೀಶ್ವರ ಮಠದತ್ತ ಆಗಮಿಸುತ್ತಿದ್ದಾರೆ.&lt;/p&gt;]]></content:encoded>
            <category>gadag</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/gadag-swamiji-came-out-of-samadhi-and-gave-darshan-after-33-days-775-hours-of-yoga-samadhi-mrq-w7xc0ik"/>
        </item>
        <item>
            <title><![CDATA[ಗದಗ ವಿವಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶವ ಪತ್ತೆ! ಸಾವಿನ ಸುತ್ತ ಹಬ್ಬಿದೆ ಹತ್ತಾರು ಅನುಮಾನ!]]></title>
            <link>https://kannada.asianetnews.com/state/female-student-found-dead-rural-development-university-hostel-bmk/articleshow-y5aq8ng</link>
            <guid isPermaLink="true">https://kannada.asianetnews.com/state/female-student-found-dead-rural-development-university-hostel-bmk/articleshow-y5aq8ng</guid>
            <pubDate>Fri, 24 Jul 2026 18:20:06 +0530</pubDate>
            <description><![CDATA[ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹಾಸ್ಟೆಲ್&zwnj;ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kya2raws5mdqy1m7y2a7keb3,imgname-gadag-1784897350553.jpg" type="image/jpeg" height="390" width="690"/>
            <content:encoded><![CDATA[&lt;p&gt;ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ ಡಾ. ವೀಣಾ ಹಾನಾಪುರ (25) ಎಂದು ಗುರುತಿಸಲಾಗಿದೆ.&lt;/p&gt;&lt;h2&gt;&lt;strong&gt;ಎಂಪಿಎಚ್&zwnj; ಕೋರ್ಸ್ ವ್ಯಾಸಾಂಗ!&lt;/strong&gt;&lt;/h2&gt;&lt;p&gt;ಮೃತ ವೀಣಾ ಅವರು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ಕೋರ್ಸ್&zwnj;ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ರಾತ್ರಿ ವಾಡಿಕೆಯಂತೆ ತಮ್ಮ ಹಾಸ್ಟೆಲ್ ರೂಮ್&zwnj;ಗೆ ತೆರಳಿದ್ದ ವೀಣಾ, ರಾತ್ರಿ 11 ಗಂಟೆಯಾದರೂ ಹೊರಬಾರದೇ ಇದ್ದಾಗ ಅನುಮಾನಗೊಂಡ ಹಾಸ್ಟೆಲ್ ವಾರ್ಡನ್ ಕೊಠಡಿಯ ಬಳಿ ತೆರಳಿ ತಪಾಸಣೆ ನಡೆಸಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಸಿಬ್ಬಂದಿ ಸಹಾಯದಿಂದ ಕೊಠಡಿಯ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಮಂಚದ ಕಂಬಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವೀಣಾ ಅವರ ಶವ ಪತ್ತೆಯಾಗಿದೆ.&lt;/p&gt;&lt;p&gt;ಸಾವು ಅಲ್ಲ, ಎಂದು ಪೋಷಕರ ಗಂಭೀರ ಆರೋಪ!&lt;/p&gt;&lt;p&gt;ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ವೀಣಾ ಅವರ ಕುಟುಂಬಸ್ಥರು ಮಗಳ ಸಾವಿನ ಹಿಂದೆ ಅಪಾರ ಅನುಮಾನಗಳಿವೆ ಎಂದು ಆರೋಪಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಬದಲಿಗೆ ಭೀಕರ ಕೊಲೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.&lt;/p&gt;&lt;h3&gt;&lt;strong&gt;ಪೋಷಕರು ವ್ಯಕ್ತಪಡಿಸಿರುವ ಪ್ರಮುಖ ಅನುಮಾನಗಳೇನು?&lt;/strong&gt;&lt;/h3&gt;&lt;p&gt;&lt;strong&gt;ನೆಲಕ್ಕೆ ತಾಗಿದ್ದ ಕಾಲುಗಳು:&lt;/strong&gt; ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿದ್ದ ಶವದ ಕಾಲುಗಳು ನೆಲಕ್ಕೆ ತಾಗುತ್ತಿದ್ದವು. ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಯಾರೋ ಕೊಲೆ ಮಾಡಿ ತೂಗಾಕಿದ್ದಾರೆ ಎಂಬುದು ಪೋಷಕರ ಮುಖ್ಯ ಆರೋಪ.&lt;/p&gt;&lt;p&gt;&lt;strong&gt;ಅಪರಿಚಿತ ಬಟ್ಟೆ ಹಾಗೂ ಗಾಯದ ಗುರುತು:&lt;/strong&gt; ನೇಣು ಬಿಗಿದುಕೊಳ್ಳಲು ಬಳಸಿರುವ ಬಟ್ಟೆ ಮಗಳಿಗೆ ಸೇರಿದ್ದಲ್ಲ. ಜೊತೆಗೆ ಮಗಳ ಮುಖದ ಮೇಲೆ ತೀವ್ರ ಗಾಯದ ಗುರುತುಗಳಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆಯಿದೆ.&lt;/p&gt;&lt;p&gt;ಡೆತ್ ನೋಟ್ ಮೇಲಿನ ಅನುಮಾನ: ಘಟನಾ ಸ್ಥಳದಲ್ಲಿ ಸಿಕ್ಕಿದೆ ಎನ್ನಲಾದ ಡೆತ್ ನೋಟ್&zwnj;ನಲ್ಲಿರುವ ಹಸ್ತಾಕ್ಷರ ತಮ್ಮ ಮಗಳದ್ದಲ್ಲ ಎಂದು ಪೋಷಕರು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಜಿಮ್ಸ್ ಶವಾಗಾರಕ್ಕೆ ಶವ ರವಾನೆ!&lt;/strong&gt;&lt;/h3&gt;&lt;p&gt;ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ (GIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. &quot;ನಮ್ಮ ಮಗಳ ಸಾವಿನ ಹಿಂದೆ ದೊಡ್ಡ ಸಂಚಿದೆ, ನಮಗೆ ನ್ಯಾಯ ಸಿಗಬೇಕು ಮತ್ತು ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಯಾಗಬೇಕು&quot; ಎಂದು ಕಣ್ಣೀರಿಡುತ್ತಾ ಪೋಷಕರು ಪೊಲೀಸರನ್ನು ಆಗ್ರಹಿಸಿದ್ದಾರೆ. ವಿದ್ಯಾರ್ಥಿನಿಯ ಸಾವಿನ ನಿಜವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ತಿಳಿದುಬರಬೇಕಿದ್ದು, ಈ ಘಟನೆಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.&lt;/p&gt;]]></content:encoded>
            <category>gadag</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/state/female-student-found-dead-rural-development-university-hostel-bmk/articleshow-y5aq8ng"/>
        </item>
    </channel>
</rss>
