<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 24 Apr 2026 00:25:41 +0530</lastBuildDate>
        <atom:link href="https://kannada.asianetnews.com/rss/hassan" rel="self" type="application/rss+xml"/>
        <item>
            <title><![CDATA['ಯಾಕಪ್ಪ ಹೊಡೆಯುತ್ತಿದ್ದೀರಿ...' ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!]]></title>
            <link>https://kannada.asianetnews.com/karnataka-districts/pre-wedding-shoot-turns-violent-locals-attack-photographer-at-sakleshpur-bettada-bhairaveshwara-temple-rav/articleshow-72e8q6v</link>
            <guid isPermaLink="true">https://kannada.asianetnews.com/karnataka-districts/pre-wedding-shoot-turns-violent-locals-attack-photographer-at-sakleshpur-bettada-bhairaveshwara-temple-rav/articleshow-72e8q6v</guid>
            <pubDate>Fri, 27 Mar 2026 13:39:29 +0530</pubDate>
            <description><![CDATA[ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇಗುಲದ ಬಳಿ ಪ್ರೀ-ವೆಡ್ಡಿಂಗ್ ಶೂಟಿಂಗ್ ಮಾಡುತ್ತಿದ್ದ ಫೋಟೋಗ್ರಾಫರ್&zwnj;ಗಳ ಮೇಲೆ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಮಾತಿನ ಚಕಮಕಿ ನಡೆದು, ಗಲಾಟೆ ತಾರಕಕ್ಕೇರಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmq2emgnxw2dh8c1t4dxp03b,imgname----------------------1--1774595822101.gif" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ (ಮಾ. 27): &lt;/strong&gt;ಪ್ರವಾಸಕ್ಕೆ ಬಂದು ಫೋಟೋ ಶೂಟಿಂಗ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಕೆಲವು ಪುಂಡರು ವಿನಾಕಾರಣ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ನಡೆದಿದೆ.&lt;/p&gt;&lt;p&gt;ಪ್ರೀ-ವೆಡ್ಡಿಂಗ್ ಶೂಟ್ ಮಾಡಲು ಬಂದಿದ್ದ ಫೋಟೋಗ್ರಾಫರ್&zwnj;ಗಳ ಮೇಲೆ ಸ್ಥಳೀಯ ಯುವಕರು ಎನ್ನಲಾದ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.&lt;/p&gt;&lt;h2&gt;ಸ್ಥಳೀಯ ಪುಂಡರು ಹಲ್ಲೆ ಮಾಡಿದ್ದು ಯಾಕೆ?&lt;/h2&gt;&lt;p&gt;ಬೆಳ್ಳಂಬೆಳಗ್ಗೆ ದೇವಸ್ಥಾನದ ಸುಂದರ ಪರಿಸರದಲ್ಲಿ ಫೋಟೋಗ್ರಾಫರ್&zwnj;ಗಳು ಪ್ರೀ-ವೆಡ್ಡಿಂಗ್ ಶೂಟಿಂಗ್&zwnj; ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಕೆಲವು ಸ್ಥಳೀಯರು, 'ಇಲ್ಲಿ ಯಾಕೆ ಶೂಟಿಂಗ್ ಮಾಡುತ್ತಿದ್ದೀರಿ? ಯಾರು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ. ದೇವಸ್ಥಾನದಲ್ಲಿ ಫೋಟೋ ತೆಗೆಯಲು ಯಾರ ಅನುಮತಿ ಬೇಕು, ಪ್ರವಾಸಕ್ಕೆ ಬಂದಿದ್ದೇವೆ ಫೋಟೋ ತೆಗೆದರೆ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.&lt;/p&gt;&lt;h3&gt;ಫೋಟೋಗ್ರಾಫರ್&zwnj;ಗಳ ಮೇಲೆ ಗೂಂಡಾಗಿರಿ&lt;/h3&gt;&lt;p&gt;ಮಾತಿನ ಚಕಮಕಿ ತಾರಕಕ್ಕೇರಿದಾಗ ಸ್ಥಳೀಯರು ಎಂದು ಹೇಳಿಕೊಂಡ ಯುವಕರ ಗುಂಪು ಫೋಟೋಗ್ರಾಫರ್&zwnj;ಗಳ ಮೇಲೆ ಏಕಾಏಕಿ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. 'ಯಾಕಪ್ಪಾ ಹೊಡೆಯುತ್ತಿದ್ದೀರಿ, ಏನಾಗಿದೆ?' ಎಂದು ಕೇಳಿದರೂ ಫೋಟೋಗ್ರಾಫರ್&zwnj;ಗಳಿಗೆ ಮನಬಂದಂತೆ ಥಳಿಸಿದ್ದಾರೆ. ಅವರು ಯಾಕೆ ಹೊಡೆಯುತ್ತಿದ್ದಾರೆಂದೇ ತಿಳಿದಿಲ್ಲ. ಪ್ರಶ್ನಿಸಿದಷ್ಟೂ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಕಾಣಬಹುದು.&lt;/p&gt;&lt;p&gt;ಶಾಂತಿಯುತವಾಗಿದ್ದ ದೇವಸ್ಥಾನದ ಆವರಣ ಪುಂಡರಿಂದಾಗಿ ಕೆಲಕಾಲ ಪ್ರವಾಸಿಗರಲ್ಲಿ ಆತಂಕ ತರಿಸಿತು. ಪ್ರವಾಸಿಗರ ಮೇಲೆ ಸ್ಥಳೀಯರು ಎನ್ನಲಾದ ವ್ಯಕ್ತಿಗಳು ಗೂಂಡಾಗಿರಿ ನಡೆಸುತ್ತಿರುವುದನ್ನು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೂಟಿಂಗ್ ಉಪಕರಣಗಳನ್ನು ಹಾನಿಗೊಳಿಸಲು ಯತ್ನಿಸಿದ ಘಟನೆಯೂ ನಡೆದಿದೆ ಎನ್ನಲಾಗಿದೆ.&lt;/p&gt;&lt;h3&gt;ಪೊಲೀಸ್ ಮೆಟ್ಟಿಲೇರಿದ ಪ್ರಕರಣ&lt;/h3&gt;&lt;p&gt;ಈ ಗಲಾಟೆಗೆ ಸಂಬಂಧಿಸಿದಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡೂ ಕಡೆಯವರು ಪರಸ್ಪರ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವಿನ ಇಂತಹ ಘರ್ಷಣೆಗಳು ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುತ್ತಿವೆ.&lt;/p&gt;]]></content:encoded>
            <category>hassan</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/pre-wedding-shoot-turns-violent-locals-attack-photographer-at-sakleshpur-bettada-bhairaveshwara-temple-rav/articleshow-72e8q6v"/>
        </item>
        <item>
            <title><![CDATA[ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಫುಲ್ ಕೂಲ್! ಆದ್ರೆ ಮಾವಿನ ಬೆಳೆಗೆ ಟ್ರಬಲ್]]></title>
            <link>https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</link>
            <guid isPermaLink="true">https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</guid>
            <pubDate>Mon, 16 Mar 2026 20:07:42 +0530</pubDate>
            <description><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkvgt0sc0bgmx9eqms2wcyy2,imgname-mysuru-hailstones-rain-1773671351084.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸುಡುವ ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ ತಂದಿದೆ. ಆದರೆ, ಕೆಲವು ಕಡೆ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಂಕಷ್ಟವೂ ಎದುರಾಗಿದೆ.&lt;/p&gt;&lt;img&gt;&lt;p&gt;ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸುತ್ತಮುತ್ತ ವರ್ಷದ ಮೊದಲ ಮಳೆಯಾಗಿದೆ. ಆದರೆ, ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಪಿರಿಯಾಪಟ್ಟಣ ಪಟ್ಟಣದಲ್ಲಿ ಸಿಡಿಲು ಬಡಿದ ರಭಸಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ. ಮಳೆ ಸುರಿಯುತ್ತಿದ್ದರೂ ಮರದ ಮೇಲ್ಭಾಗದಲ್ಲಿ ಬೆಂಕಿ ಆವರಿಸಿದ್ದು ನೋಡುಗರನ್ನು ಆತಂಕಕ್ಕೀಡು ಮಾಡಿತ್ತು.&lt;/p&gt;&lt;img&gt;&lt;p&gt;ಹಾಸನ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಳೆಯ ತೀವ್ರತೆಗೆ ರಸ್ತೆ ಬದಿಯಲ್ಲಿ ಮತ್ತು ಮನೆಗಳ ಮೇಲೆ ಆಲಿಕಲ್ಲುಗಳು ರಾಶಿ ರಾಶಿಯಾಗಿ ಬಿದ್ದಿದ್ದವು. ರಸ್ತೆಯಲ್ಲಿ ಆಲಿಕಲ್ಲುಗಳನ್ನು ನೋಡಿ ಮಕ್ಕಳು ಮತ್ತು ಸಾರ್ವಜನಿಕರು ಖುಷಿಯಿಂದ ಆಟವಾಡಿದ ದೃಶ್ಯಗಳು ಕಂಡುಬಂದವು. ವರ್ಷದ ಮೊದಲ ಮಳೆ ಇದಾಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಸ್ವಲ್ಪ ಮಟ್ಟಿಗೆ ಪರದಾಟ ನಡೆಸಬೇಕಾಯಿತು.&lt;/p&gt;&lt;img&gt;&lt;p&gt;ಬಿಸಿಲ ನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡು ಸೇರಿದಂತೆ ವಿವಿಧೆಡೆ ಸುಮಾರು ಒಂದು ಗಂಟೆ ಕಾಲ ನಿರಂತರ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪು ನೀಡಿದ್ದರೂ, ಆಲಿಕಲ್ಲುಗಳ ಅಬ್ಬರ ಮಾವು ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೂವು ಬಿಟ್ಟಿದ್ದ ಮಾವಿನ ಗಿಡಗಳಿಗೆ ಆಲಿಕಲ್ಲು ಮಳೆ ಏಟು ನೀಡಿದ್ದು, ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.&lt;/p&gt;&lt;img&gt;&lt;p&gt;ಕೊಡಗು ಜಿಲ್ಲೆಯ ಶಿರಂಗಾಲ, ಹೆಬ್ಬಾಲೆ, ಬೇತ್ರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹೊಲ ಮತ್ತು ಗದ್ದೆಗಳಿಗೆ ನೀರು ನುಗ್ಗುವಂತೆ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಇಳೆಗೆ ಚೈತನ್ಯ ನೀಡಿದೆ. ಕಾಫಿ ಮತ್ತು ಕರಿಮೆಣಸು ಬೆಳೆಗಾರರಿಗೆ ಈ ಮಳೆ ವರದಾನವಾಗಿ ಪರಿಣಮಿಸುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಈ ದಿಢೀರ್ ಮಳೆ ಬಿಸಿಲಿನ ತಾಪವನ್ನು ಕಡಿಮೆ ಮಾಡಿದ್ದರೂ, ಆಲಿಕಲ್ಲು ಮತ್ತು ಸಿಡಿಲಿನ ಅಬ್ಬರ ಕೆಲವು ಅನಾಹುತಗಳಿಗೂ ಕಾರಣವಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.&lt;/p&gt;]]></content:encoded>
            <category>hassan</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp"/>
        </item>
        <item>
            <title><![CDATA[Hassan: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಅದಲು ಬದಲು: 6 ವಿದ್ಯಾರ್ಥಿಗಳಿಗೆ ಅನ್ಯಾಯ]]></title>
            <link>https://kannada.asianetnews.com/karnataka-districts/hassan-second-puc-computer-science-question-paper-changed-injustice-to-6-students-mrq/articleshow-7ctrdbw</link>
            <guid isPermaLink="true">https://kannada.asianetnews.com/karnataka-districts/hassan-second-puc-computer-science-question-paper-changed-injustice-to-6-students-mrq/articleshow-7ctrdbw</guid>
            <pubDate>Tue, 17 Mar 2026 07:17:04 +0530</pubDate>
            <description><![CDATA[&lt;p&gt;ದ್ವಿತೀಯ ಪಿಯುಸಿ ಕಂಪ್ಯೂಟರ್&zwnj; ಸೈನ್ಸ್ ಪರೀಕ್ಷೆ ವೇಳೆ, ಆರು ವಿದ್ಯಾರ್ಥಿನಿಯರಿಗೆ ಪುನರಾವರ್ತಿತ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ನೀಡಿ ಅನ್ಯಾಯ ಮಾಡಲಾಗಿದೆ. ಮೂರು ಗಂಟೆಗಳ ಕಾಲ ತಪ್ಪಾದ ಪರೀಕ್ಷೆ ಬರೆದ ನಂತರ, ಹೊಸ ಪ್ರಶ್ನೆಪತ್ರಿಕೆಗೆ ಕೇವಲ ಅರ್ಧ ಗಂಟೆ ಸಮಯ ನೀಡಲಾಗಿತ್ತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkwqj4pw7empkkyxk34nny2m,imgname-puc-1773711987420.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ: &amp;nbsp;&lt;/strong&gt;ಸೋಮವಾರ ನಡೆದ ದ್ವಿತೀಯ ಪಿಯುಸಿ ಕಂಪ್ಯೂಟರ್&zwnj; ಸೈನ್ಸ್ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ನಡೆದ ತಪ್ಪಿನಿಂದ ಆರು ವಿದ್ಯಾರ್ಥಿನಿಯರಿಗೆ ಅನ್ಯಾಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಬೇಲೂರಿನ ಬಿಕ್ಕೋಡು ರಸ್ತೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೂಂ ನಂಬರ್&zwnj; 6ರಲ್ಲಿ 6 ವಿದ್ಯಾರ್ಥಿನಿಯರಿಗೆ ಪ್ರಶ್ನೆಪತ್ರಿಕೆ ವಿತರಿಸುವ ಸಂಧ್ಯಾ ರಿಪೀಟರ್ಸ್&zwnj; ವಿದ್ಯಾರ್ಥಿಗಳಿಗೆ ನೀಡುವ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾರೆ. ಒಂದೇ ಕೊಠಡಿಯಲ್ಲಿ ರಿಪೀಟರ್ಸ್&zwnj; ಮತ್ತು ಮೊದಲ ಬಾರಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿದ್ದರು.&lt;/p&gt;&lt;h2&gt;&lt;strong&gt;ತಪ್ಪಾದ ಪ್ರಶ್ನೆಪತ್ರಿಕೆ&lt;/strong&gt;&lt;/h2&gt;&lt;p&gt;ಹಳೆಯ ಮತ್ತು ಹೊಸ ಪಠ್ಯಕ್ರಮಗಳಲ್ಲಿ ಕೆಲವು ಅಧ್ಯಾಯಗಳು ಒಂದೇ ರೀತಿಯಾಗಿದ್ದರಿಂದ ವಿದ್ಯಾರ್ಥಿನಿಯರು ಇದು ಕಷ್ಟವಾದ ಪ್ರಶ್ನೆಪತ್ರಿಕೆ ಇರಬಹುದು ಎಂದುಕೊಂಡು ಮೂರು ಗಂಟೆಗಳ ಕಾಲ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಮುಗಿದು ಹೊರ ಬಂದ ಬಳಿಕ ಇತರ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆಯನ್ನು ಹೋಲಿಸಿ ನೋಡಿದಾಗ ಅವರು ಬರೆದಿದ್ದು ತಪ್ಪಾದ ಪ್ರಶ್ನೆಪತ್ರಿಕೆ ಎಂಬುದು ತಿಳಿದು ಬಂದಿದೆ.&lt;/p&gt;&lt;p&gt;ತಕ್ಷಣ ಪ್ರಾಂಶುಪಾಲರಿಗೆ ಮತ್ತು ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾರೆ. ಪರೀಕ್ಷೆ ಸಮಯ ಮುಗಿದ ನಂತರ ಹೊಸ ಪ್ರಶ್ನೆಪತ್ರಿಕೆ ನೀಡಿ ಕೇವಲ ಅರ್ಧ ಗಂಟೆಯಲ್ಲಿ ಬರೆಯುವಂತೆ ಸೂಚಿಸಿ ವಿದ್ಯಾರ್ಥಿನಿಯರಿಗೆ ಆತಂಕ ಉಂಟು ಮಾಡಿದ್ದಾರೆ.&lt;/p&gt;&lt;h3&gt;&lt;strong&gt;ಅದಲು-ಬದಲು ಮಾಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೆಟ್ಟು&lt;/strong&gt;&lt;/h3&gt;&lt;p&gt;ಈ ಸಂದರ್ಭದಲ್ಲಿ ಕಣ್ಣೀರು ಹಾಕಿ ಮಾತನಾಡಿದ ವಿದ್ಯಾರ್ಥಿನಿಯರು, ನಾವು ಬಡ ಕುಟುಂಬದ ಮಕ್ಕಳಾಗಿದ್ದರೂ ನಮ್ಮ ಪೋಷಕರು ಕಷ್ಟಪಟ್ಟು ದುಡಿದು ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಆದರೆ ಪ್ರಶ್ನೆಪತ್ರಿಕೆ ವಿತರಿಸುವಾಗ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನೀಡುವ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾರೆ. ಪ್ರಶ್ನೆಪತ್ರಿಕೆಯನ್ನು ಅದಲು-ಬದಲು ಮಾಡಿ ನಮ್ಮ ಭವಿಷ್ಯಕ್ಕೆ ಪೆಟ್ಟು ನೀಡಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯುಪಿಎಸ್&zwnj;ಸಿ ಪರೀಕ್ಷೆಯಲ್ಲಿ 389ನೇ &zwnj;Rank ಪಡೆದ ಸಕಲೇಶಪುರ ತಾಲೂಕಿನ ರೈತನ ಮಗ ಮನೋ&lt;/strong&gt;&lt;strong&gt;ಜ್&zwnj;&lt;/strong&gt;&lt;/p&gt;&lt;p&gt;ನಾವು ಕೇಳಲು ಹೋದ ಸಂದರ್ಭದಲ್ಲಿ ಇಲ್ಲಿಯ ಪ್ರಾಂಶುಪಾಲರು ಮುಂದೆ 20 ದಿನಗಳ ಬಳಿಕ ಮತ್ತೆ ಪರೀಕ್ಷೆ ಬರೆಯಲು ಅವಕಾಶವಿದ್ದು, ಆವಾಗ ನೀವು ಮತ್ತೆ ಬರೆಯಬಹುದು ಎಂದು ಉಡಾಫೆ ಉತ್ತರ ನೀಡಿದ್ದಾರೆ. ನಾವು ಪತ್ರಕರ್ತರ ಬಳಿ ಹೋಗುತ್ತೇವೆ ಎಂದಾಗ ಅರ್ಧ ಗಂಟೆ ಕಾಲಾವಲಾಶ ನೀಡಿ ಹೆಚ್ಚುವರಿ ಸಮಯ ನೀಡಿದರು. ಆದರೆ, ಮೂರು ಗಂಟೆ ಅವಧಿಯ ಪರೀಕ್ಷೆ ಕೇವಲ ಅರ್ಧ ಗಂಟೆಯಲ್ಲಿ ಹೇಗೆ ಬರೆಯಲು ಸಾಧ್ಯ ಎಂದು ಕಣ್ಣೀರು ಹಾಕಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಾಸನ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ಲೋಕಾ ಅಧಿಕಾರಿಗಳಿಗೆ ಮನೆ ಬಾಗಿಲು ತೆರೆಯದ ಇಂಜಿನಿಯರ್ ಸತ್ಯಾನಾರಾಯಣ&lt;/strong&gt;&lt;/p&gt;]]></content:encoded>
            <category>hassan</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hassan-second-puc-computer-science-question-paper-changed-injustice-to-6-students-mrq/articleshow-7ctrdbw"/>
        </item>
        <item>
            <title><![CDATA[ಯುಪಿಎಸ್‌ಸಿ ಪರೀಕ್ಷೆಯಲ್ಲಿ 389ನೇ ‌Rank ಪಡೆದ ಸಕಲೇಶಪುರ ತಾಲೂಕಿನ ರೈತನ ಮಗ ಮನೋಜ್‌]]></title>
            <link>https://kannada.asianetnews.com/education/hassan-manoj-the-son-of-a-farmer-from-sakleshpur-taluk-secured-389th-rank-in-the-upsc-exam-mrq/articleshow-9w2pxri</link>
            <guid isPermaLink="true">https://kannada.asianetnews.com/education/hassan-manoj-the-son-of-a-farmer-from-sakleshpur-taluk-secured-389th-rank-in-the-upsc-exam-mrq/articleshow-9w2pxri</guid>
            <pubDate>Sat, 07 Mar 2026 07:07:26 +0530</pubDate>
            <description><![CDATA[ಹಾಸನ ಜಿಲ್ಲೆಯ ಸಕಲೇಶಪುರದ ರೈತ ಕುಟುಂಬದ ಜಿ.ಎಸ್. ಮನೋಜ್, ಯುಪಿಎಸ್&zwnj;ಸಿ ಪರೀಕ್ಷೆಯಲ್ಲಿ 389ನೇ ರ್ಯಾಂಕ್ ಪಡೆದಿದ್ದಾರೆ. ಯಾವುದೇ ಕೋಚಿಂಗ್ ಇಲ್ಲದೆ, ಸ್ವಯಂ ಅಧ್ಯಯನದ ಮೂಲಕ ಈ ಸಾಧನೆ ಮಾಡಿರುವುದು ಅವರ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಅವರ ಈ ಯಶಸ್ಸು ಗ್ರಾಮೀಣ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kk2z1zpz8cj0s86ts1azj4s6,imgname-upsc-hassan-manoj-1772847431391.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಗುರ್ಜಾನಹಳ್ಳಿ ಗ್ರಾಮದ ರೈತ ಕುಟುಂಬದ ಯುವಕ ಜಿ.ಎಸ್. ಮನೋಜ್ ಅವರು ಯುಪಿಎಸ್&zwnj;ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 389ನೇ &zwnj;ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಮನೋಜ್ ಅವರು ಗ್ರಾಮೀಣ ಹಿನ್ನೆಲೆಯಿಂದ ಬಂದಿದ್ದರೂ ದೃಢ ಸಂಕಲ್ಪ ಮತ್ತು ಪರಿಶ್ರಮದ ಮೂಲಕ ಈ ಸಾಧನೆ ಮಾಡಿದ್ದಾರೆ.&lt;/p&gt;&lt;p&gt;ರೈತ ಜಿ.ಕೆ.ಸೋಮಶೇಖರ್ ಹಾಗೂ ತಾಯಿ ತೀರ್ಥಾವತಿ ಪುತ್ರರಾದ ಮನೋಜ್ ಅವರು ಹಾಸನದ ಮಾವಿನಕೆರೆ ನವೋದಯ ಶಾಲೆಯಲ್ಲಿ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ ಸೂರತ್ಕಲ್&zwnj;ನ ಎನ್&zwnj;ಐಟಿಕೆ ಕಾಲೇಜಿನಲ್ಲಿ ಬಿ.ಟೆಕ್. ಪದವಿ ಪಡೆದಿದ್ದಾರೆ. ಪದವಿ ನಂತರ ಕ್ಯಾಂಪಸ್ ಆಯ್ಕೆಯಾದರೂ ಯುಪಿಎಸ್&zwnj;ಸಿ ಪರೀಕ್ಷೆ ಬರೆಯುವ ಉದ್ದೇಶದಿಂದ ಉದ್ಯೋಗಕ್ಕೆ ಸೇರದೆ, ಪರೀಕ್ಷಾ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು.&amp;nbsp;&lt;/p&gt;&lt;h2&gt;&lt;strong&gt;ಸ್ವಯಂ ಅಧ್ಯಯನದ ಮೂಲಕ ಯುಪಿಎಸ್&zwnj;ಸಿ ಪರೀಕ್ಷೆಯಲ್ಲಿ 389 ನೇ ರ್ಯಾಂಕ್&lt;/strong&gt;&lt;/h2&gt;&lt;p&gt;ಯಾವುದೇ ಕೋಚಿಂಗ್ ಸೆಂಟರ್&zwnj;ನಲ್ಲಿ ತರಬೇತಿ ಪಡೆಯದೇ, ಬಾಡಿಗೆ ಕೊಠಡಿ ಮಾಡಿಕೊಂಡು ಗ್ರಂಥಾಲಯದ ಪುಸ್ತಕಗಳನ್ನು ಓದುತ್ತಲೇ ಸ್ವಯಂ ಅಧ್ಯಯನದ ಮೂಲಕ ಯುಪಿಎಸ್&zwnj;ಸಿ ಪರೀಕ್ಷೆಯಲ್ಲಿ 389 ನೇ ರ್ಯಾಂಕ್ ಗಳಿಸಿರುವುದು ವಿಶೇಷವಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯುಪಿಎಸ್&zwnj;ಸಿಯಲ್ಲಿ ರಾಜ್ಯ ಗೆದ್ದ PWD ಇಂಜಿನಿಯರ್ ಕಿರಣ್ ಕಮತೆ! ಫಸ್ಟ್ ರ&zwj;್ಯಾಂಕ್ ಪಡೆದ ಉತ್ತರ ಕರ್ನಾಟಕದ ಹಮ್ಮೀರ&lt;/strong&gt;&lt;/p&gt;&lt;h3&gt;&lt;strong&gt;ಗ್ರಾಮದಲ್ಲಿ ಹಬ್ಬದ ವಾತಾವರಣ&lt;/strong&gt;&lt;/h3&gt;&lt;p&gt;ಮನೋಜ್ ಅವರ ಈ ಸಾಧನೆಗೆ ಕುಟುಂಬದವರು, ಸ್ನೇಹಿತರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ಯುವಕರಿಗೆ ಮನೋಜ್ ಸಾಧನೆ ಪ್ರೇರಣೆಯಾಗಿದೆ ಎಂದು ಮನೋಜ್ ಅವರ ತಂದೆ ಸೋಮಶೇಖರ್ ಹಮ್ಮೆಯಿಂದ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಐಎಎಸ್&zwnj;, ಐಎಫ್ಎಸ್&zwnj;ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್&zwnj; ಇಲ್ಲ- ಯುಪಿಎಸ್ಸಿ ನಿಯಮ ಬದಲು&lt;/strong&gt;&lt;/p&gt;]]></content:encoded>
            <category>hassan</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/hassan-manoj-the-son-of-a-farmer-from-sakleshpur-taluk-secured-389th-rank-in-the-upsc-exam-mrq/articleshow-9w2pxri"/>
        </item>
        <item>
            <title><![CDATA[ಮಂಗಳೂರು-ಸುಬ್ರಹ್ಮಣ್ಯ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ, ರದ್ದಾಗಿದ್ದ ಪ್ಯಾಸೆಂಜರ್‌ ರೈಲು  ಮತ್ತೆ ಆರಂಭ]]></title>
            <link>https://kannada.asianetnews.com/karnataka-districts/mangaluru-subrahmanya-road-passenger-train-services-restored-revised-schedule-announced-gdp/articleshow-aglc24b</link>
            <guid isPermaLink="true">https://kannada.asianetnews.com/karnataka-districts/mangaluru-subrahmanya-road-passenger-train-services-restored-revised-schedule-announced-gdp/articleshow-aglc24b</guid>
            <pubDate>Thu, 16 Apr 2026 20:03:16 +0530</pubDate>
            <description><![CDATA[ನಿರ್ವಹಣಾ ಕಾಮಗಾರಿ ಹಿನ್ನೆಲೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದ್ದ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಇದೀಗ ಮರುಸ್ಥಾಪಿಸಲಾಗಿದೆ. ರೈಲ್ವೆ ಇಲಾಖೆಯು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕೆಲವು ರೈಲುಗಳ ವಿಳಂಬದ ಅವಧಿಯನ್ನು ಕಡಿಮೆ ಮಾಡಿದೆ ಮತ್ತು ಇತರ ರೈಲುಗಳ ಸಂಚಾರಕ್ಕೆ ಹೊಸ ದಿನಾಂಕಗಳನ್ನು ನಿಗದಿಪಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01km4xsq1xkfvyypbsnr1ny7hr,imgname-mangaluru-subrahmanya-passenger-trains-1773986962493.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಮಂಗಳೂರು: &lt;/strong&gt;ಸುಬ್ರಹ್ಮಣ್ಯ ರೋಡ್&zwnj;, ಎಡಮಂಗಲ ಮತ್ತು ನರಿಮೊಗರು ರೈಲು ಮಾರ್ಗಗಳ ನಡುವೆ ಹಳಿ ಹಾಗೂ ವಿದ್ಯುತ್ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದ್ದ ಹಾಗೂ ಮರುನಿಗದಿಗೊಳಿಸಲಾಗಿದ್ದ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಇದೀಗ ಮರುಸ್ಥಾಪಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.&lt;/p&gt;&lt;p&gt;ಈ ಕುರಿತು ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಮಾಹಿತಿ ನೀಡಿದ್ದು, ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸ ವೇಳಾಪಟ್ಟಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.&lt;/p&gt;&lt;h2&gt;ಯಾವ ರೈಲು?&lt;/h2&gt;&lt;p&gt;ಮೊದಲು ಜೂನ್&zwnj; 10ರಿಂದ 21ರವರೆಗೆ ರದ್ದುಪಡಿಸಲಾಗಿದ್ದ ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್&ndash;ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ಹಾಗೂ ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್&ndash;ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲುಗಳು ಈಗ ಮರುಸ್ಥಾಪನೆಯಾಗಿದ್ದು, ನಿಗದಿತ ಮಾರ್ಗ ಮತ್ತು ಸಮಯದಂತೆ ಸಂಚರಿಸಲಿವೆ.&lt;/p&gt;&lt;p&gt;ಇನ್ನು ರೈಲು ಸಂಖ್ಯೆ 56229 ಮಂಗಳೂರು ಸೆಂಟ್ರಲ್&ndash;ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲಿಗೆ ಮೊದಲು ಏಪ್ರಿಲ್&zwnj; 21ರಿಂದ ಜೂನ್&zwnj; 9ರವರೆಗೆ 55 ನಿಮಿಷಗಳ ವಿಳಂಬ ಇರಲಿದೆ ಎಂದು ತಿಳಿಸಲಾಗಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್&zwnj; 16ರಿಂದ ಜೂನ್&zwnj; 4ರವರೆಗೆ ಆರಂಭವಾಗುವ ಪ್ರಯಾಣಗಳಲ್ಲಿ ಈ ರೈಲು ಕೇವಲ 35 ನಿಮಿಷಗಳ ವಿಳಂಬದೊಂದಿಗೆ ಸಂಚರಿಸಲಿದೆ. ಜೂನ್&zwnj; 5ರಿಂದ 9ರವರೆಗೆ ಉಳಿದ ದಿನಗಳಲ್ಲಿ ರೈಲು ತನ್ನ ಸಾಮಾನ್ಯ ವೇಳಾಪಟ್ಟಿಯಂತೆ ಸಂಚರಿಸುವುದಾಗಿ ತಿಳಿಸಲಾಗಿದೆ.&lt;/p&gt;&lt;h2&gt;ಮರುನಿಗದಿ ದಿನಾಂಕಗಳಲ್ಲಿಯೂ ಬದಲಾವಣೆ&lt;/h2&gt;&lt;p&gt;ಅದೇ ರೀತಿ ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್&ndash;ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲಿನ ಮರುನಿಗದಿ ದಿನಾಂಕಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಏಪ್ರಿಲ್&zwnj; 16, 18, 21, 23, 25, 28, 30 ಹಾಗೂ ಮೇ 2, 5, 7, 9, 12, 14, 16, 19, 21, 23, 26, 28, 30 ಮತ್ತು ಜೂನ್&zwnj; 2 ಹಾಗೂ 4ರಂದು ಈ ರೈಲು 15 ನಿಮಿಷ ತಡವಾಗಿ ಸಂಚರಿಸಲಿದೆ. ಹಿಂದೆ ಸೂಚಿಸಲಾಗಿದ್ದಂತೆ ಜೂನ್&zwnj; 6 ಮತ್ತು 9ರಂದು ಈ ರೈಲುಗಳು ಸಾಮಾನ್ಯ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;p&gt;ಒಟ್ಟಾರೆ, ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಉಂಟಾಗಿದ್ದ ಅಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಇಲಾಖೆ ಈ ಪರಿಷ್ಕರಣೆಗಳನ್ನು ಮಾಡಿದ್ದು, ಈಗ ಬಹುತೇಕ ಸೇವೆಗಳು ಮರುಸ್ಥಾಪನೆಯಾಗಿರುವುದರಿಂದ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಲಿದೆ.&lt;/p&gt;]]></content:encoded>
            <category>hassan</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mangaluru-subrahmanya-road-passenger-train-services-restored-revised-schedule-announced-gdp/articleshow-aglc24b"/>
        </item>
        <item>
            <title><![CDATA[ಜಮೀರ್‌ರಂತಹ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಅಗತ್ಯ ನಮಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ]]></title>
            <link>https://kannada.asianetnews.com/karnataka-districts/hd-kumaraswamy-rejects-zameer-entry-jds-karnataka-politics-gvd/articleshow-anh7pkw</link>
            <guid isPermaLink="true">https://kannada.asianetnews.com/karnataka-districts/hd-kumaraswamy-rejects-zameer-entry-jds-karnataka-politics-gvd/articleshow-anh7pkw</guid>
            <pubDate>Fri, 24 Apr 2026 00:25:36 +0530</pubDate>
            <description><![CDATA[&lt;p&gt;ಯಾವುದೇ ಕಾರಣಕ್ಕೂ ಆ ಸಬ್ಜೆಕ್ಟ್&zwnj;ನೇ ರೈಜ್ ಮಾಡಬೇಡಿ. ಅದರ ಅವಶ್ಯಕತೆನೂ ಇಲ್ಲಾ ನಮಗೆ, ನಾನು ಅನುಭವಿಸಿದ್ದೀನಿ, ಆ ಸಬ್ಜೆಕ್ಟ್ ನೇ ರೈಸ್&zwnj;&quot; ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶದಿಂದ ನುಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kndcqgkv5vhpfjpbtyptw1w7,imgname----------------------60--1775344796283.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳೆನರಸೀಪುರ (ಏ.24):&lt;/strong&gt; ನಮ್ಮ ಪಕ್ಷದಲ್ಲಿ ಅಧಿಕಾರಕ್ಕೋಸ್ಕರವಾಗಿ ಜಮೀರ್&zwnj; ಅಂತಹ ಜನಗಳನ್ನು ತೆಗೆದುಕೊಳ್ಳಬೇಕಾದ ಅವಶ್ಯಕತೆ ಇಲ್ಲಾ, ನಮಗೆ ಅದರ ಎಲ್ಲಾ ಅನುಭವಗಳಾಗಿದೆ. ಯಾವುದೇ ಕಾರಣಕ್ಕೂ ಆ ಸಬ್ಜೆಕ್ಟ್&zwnj;ನೇ ರೈಜ್ ಮಾಡಬೇಡಿ. ಅದರ ಅವಶ್ಯಕತೆನೂ ಇಲ್ಲಾ ನಮಗೆ, ನಾನು ಅನುಭವಿಸಿದ್ದೀನಿ, ಆ ಸಬ್ಜೆಕ್ಟ್ ನೇ ರೈಸ್&zwnj;&quot; ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶದಿಂದ ನುಡಿದರು.&lt;/p&gt;&lt;p&gt;ಸಚಿವ ಜಮೀರ್ ಅಹಮದ್ ಜೆಡಿಎಸ್ ಸೇರ್ಪಡೆ ಕುರಿತಂತೆ ಕೇಳಿದ ಪಶ್ನೆಗೆ ಕಾರವಾಗಿ ಉತ್ತರಿಸಿದರು. ಯಾವುದೇ ಕಾರಣಕ್ಕೂ ರಾಜಕೀಯದಲ್ಲಿ ಏನೋ ಶಕ್ತಿ ಬರುತ್ತೆ ಅಂಥೇಳಿ ಬೆಂದ ಮನೆಯಲ್ಲಿ ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲವೆಂದರು. ಕಾಂಗ್ರೆಸ್ ಅಧಿಕಾರ ನಡೆಸುತ್ತಿರುವುದು, ಕಾಂಗ್ರೆಸ್ ನಾಯಕರು ಅನ್ನ ತಿನ್ನುತ್ತಿರುವುದು ಆ ವರ್ಗದ ಜನಗಳಿಂದಲೇ ಅಂಥ ಹೇಳುತ್ತಿದ್ದಾರೆ. ಇವತ್ತು ಆ ಪರಿಸ್ಥಿತಿ ರಾಜ್ಯಕ್ಕೆ ತಂದು ಇಟ್ಟಿದ್ದಾರೆ. ಪ್ರತಿನಿತ್ಯ ಅನ್ನ ತಿನ್ನುತ್ತಿರುವುದೇ ಆ ಒಂದು ವರ್ಗದಿಂದ ಅಂಥ ಹೇಳುತ್ತಿದ್ದಾರೆ. ಇವತ್ತು ಕಾಂಗ್ರೆಸ್&zwnj;ನವರು ಯಾರದರೂ ಅದನ್ನು ವಿರೋಧ ಮಾಡಿದ್ದೀರಾ ಎಂದು ಪ್ರಶ್ನಿಸಿದರು.ಎಲ್ಲೆಲ್ಲಿಗೆ ಹೋಗುತ್ತೋ ನೋಡೋಣ ಬನ್ನಿ ಎಂದು ಬಹಳ ಅರ್ಥಗರ್ಭಿತವಾಗಿ ನುಡಿದರು.&lt;/p&gt;&lt;p&gt;ದೇಶದ ಐದು ರಾಜ್ಯಗಳಲ್ಲಿ ಚುನಾವಣೆ ಪ್ರಕ್ರಿಯೆಗಳು ಮುಗಿಯುವ ಹಂತಕ್ಕೆ ಬರುತ್ತಿದೆ. ಜತೆಗೆ ರಾಜಕೀಯದಲ್ಲಿ ಅನುಭವಸ್ಥರು, ಹಿರಿತನದಿಂದ ಬಂದವರು ಬಳಸಿರುವ ಪದಬಳಕೆ ನೋಡಿದಾಗ ನಾವು ಎಲ್ಲಿಗೆ ಹೋಗುತ್ತಿದ್ದೇವೆ ಯುವ ಜನಾಂಗಕ್ಕೆ ಯಾವ ರೀತಿ ದಾರಿ ತೋರಿಸುತ್ತಾರೆ ಎಂದು ಯೋಚನೆ ಮಾಡಬೇಕು. ಕಾಂಗ್ರೆಸ್&zwnj;ನ ರಾಷ್ಟ್ರೀಯ ಅಧ್ಯಕ್ಷರು ಕರ್ನಾಟಕದವರು, ಅವರ ಮನಸ್ಸಿನಲ್ಲಿ ಯಾವ ರೀತಿಯ ಭಾವನೆಗಳನ್ನು ಇಟ್ಟುಕೊಂಡಿದ್ದಾರೆ ಎಂಬುದು ಗೌರವಾನ್ವಿತ ಪ್ರಧಾನಮಂತ್ರಿಗಳನ್ನ ಟೆರೆರಿಸ್ಟ್ ಅಂಥಾ ಕರೀತಾರೆ ಎಂದರೆ ಎಷ್ಟು ಉದ್ಧಟತನ ಇರಬಹುದು ಅರ್ಥೈಸಿಕೊಳ್ಳಬೇಕು.&lt;/p&gt;&lt;h2&gt;&lt;strong&gt;ಕಮಿಟ್&zwnj;ಮೆಂಟ್ ಇಲ್ಲ&lt;/strong&gt;&lt;/h2&gt;&lt;p&gt;ಅಭಿವೃದ್ಧಿ ಹೆಸರಿನಲ್ಲಿ ಯಾರು ಚುನಾವಣೆಯಲ್ಲಿ ಮತ ಕೇಳಲಿಲ್ಲ. ದೇಶಕ್ಕೆ ಏನು ಕೊಡ್ತಿವಿ ಅನ್ನೋದನ್ನು ಬಿಟ್ಟು ಫ್ರೀ ಕೊಡಲು ಕಾಂಪಿಟೇಷನ್ ಮಾಡುತ್ತಾ, ನೀನು ಅದು ಕೊಟ್ಟರೆ ನಾನು ಇದು ಕೊಡ್ತಿನಿ ಅಂತಾರೆ. ಇದು ಸ್ವಲ್ಪ ಆಘಾತ ತರುವ ವಿಷಯ. ಹಿಮಾಚಲ ಪ್ರದೇಶದಲ್ಲಿ ಚೀಫ್ ಸೆಕ್ರೆಟರಿಗೆ ಸಂಬಳ ಕಟ್ ಮಾಡಿದ್ದಾರೆ. ಇವತ್ತಿನ ಸರ್ಕಾರ ಜನಸಾಮಾನ್ಯರ ಬದುಕು ಸರಿಪಡಿಸುವುದು ಇರಲಿ, ಜನ ಸಾಮಾನ್ಯರ ಜೀವನದ ಜೊತೆ ಚೆಲ್ಲಾಟ ಆಡ್ತಿದ್ದಾರೆ. ಜತೆಗೆ 2028ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ ಅಂಥ ಹೇಳ್ತಾರೆ. ಕಳೆದ ಮೂರು ವರ್ಷ ನಿರಂತರವಾಗಿ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಚರ್ಚೆ ನಡೆಯುತ್ತಿದೆ.&lt;/p&gt;&lt;p&gt;ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅದರ ಬಗ್ಗೆ ಒಬ್ಬನೇ ಒಬ್ಬ ಮಂತ್ರಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿಲ್ಲ. ಇವರಿಗೆ ಈ ಸಮಸ್ಯೆಗಳಿಗೆ ಪರಿಹಾರ ತಂದು ಕೊಡುವ ಕಮಿಟ್&zwnj;ಮೆಂಟ್ ಇಲ್ಲ. ಕಳೆದ ಮೂರು ವರ್ಷದಿಂದ ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಅವರ ಮೇಲೆ ಇವರು ಇವರ ಮೇಲೆ ಅವರು ಹೇಳುತ್ತಿದ್ದರು. ಇನ್ನೊಬ್ಬರು ದೇವರ ಮೊರೆ ಹೋಗುತ್ತಿದ್ದಾರೆ. ಇದೀಗ ಮಾಟಮಂತ್ರದ್ದು ಪ್ರಾರಂಭವಾಗಿದೆ. ಮುಖ್ಯಮಂತ್ರಿಗಳ ಮೇಲೆ ಮಾಟ ಮಾಡ್ದಿದ್ದಾರೆ ಅಂಥ ಆ ಪಕ್ಷದ ಶಾಸಕರೇ ಹೇಳ್ತಾರೆ. ಇದನ್ನು ನೋಡಿದರೆ ಇವರೇನು ಹುಡುಗಾಟದ ರಾಜಕಾರಣ ಮಾಡ್ತಿದ್ದಾರ ಎಂದು ಚಿಂತಿಸಬೇಕಿದೆ ಎಂದರು.&lt;/p&gt;]]></content:encoded>
            <category>hassan</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-kumaraswamy-rejects-zameer-entry-jds-karnataka-politics-gvd/articleshow-anh7pkw"/>
        </item>
        <item>
            <title><![CDATA[ರೈತರಿಗೆ ಅನ್ಯಾಯ ಮಾಡುವ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅದು ಕಿರುಕುಳವೇ?: ಶಾಸಕ ಎಚ್.ಡಿ.ರೇವಣ್ಣ]]></title>
            <link>https://kannada.asianetnews.com/karnataka-districts/hd-revanna-slams-officials-farmers-compensation-hassan-land-issue-gvd/articleshow-ecbvbgo</link>
            <guid isPermaLink="true">https://kannada.asianetnews.com/karnataka-districts/hd-revanna-slams-officials-farmers-compensation-hassan-land-issue-gvd/articleshow-ecbvbgo</guid>
            <pubDate>Sun, 22 Mar 2026 22:46:05 +0530</pubDate>
            <description><![CDATA[&lt;p&gt;ರೈತರಿಗೆ ದ್ರೋಹ ಮಾಡುವ ಹಾಗೂ ಬೇಜವಾಬ್ದಾರಿ ಅಧಿಕಾರಿಗಳ ವರ್ತನೆಯನ್ನು ಟೀಕಿಸಿದರೆ ಅದು ಹೇಗೆ ಕಿರುಕುಳವಾಗುತ್ತದೆ. ಹಾಗೇನಾದರೂ ಆದರೆ ಸುಮ್ಮನೆ ಕೂರಲು ಸಾಧ್ಯವೇ ಎಂದು ಶಾಸಕ ಎಚ್.ಡಿ.ರೇವಣ್ಣ ಪ್ರಶ್ನಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01j31k98nc0aqcsnde2q7ct929,imgname-1.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳೆನರಸೀಪುರ (ಮಾ.22): &lt;/strong&gt;ಜಿಲ್ಲೆಯ ಹೇಮಾವತಿ, ಯಗಚಿ ವಾಟೆಹೊಳೆ ಹಾಗೂ ಹಾರಂಗಿ ಜಲಾಶಯಗಳ ವ್ಯಾಪ್ತಿಯ ಭೂಸ್ವಾಧೀನ ಪ್ರಕರಣಗಳ ಇತ್ಯರ್ಥಕ್ಕೆಂದು ರೈತರಿಗೆ ವಿತರಿಸಲು ಸರ್ಕಾರದಿಂದ ಮಂಜೂರಾಗಿದ್ದ 10 ಕೋಟಿ 95 ಲಕ್ಷಕ್ಕೂ ಹೆಚ್ಚು ಹಣವನ್ನು ಸರ್ಕಾರಕ್ಕೆ ವಾಪಸ್&zwnj; ಕಳುಹಿಸಿದ್ದಾರೆ. ರೈತರಿಗೆ ದ್ರೋಹ ಮಾಡುವ ಹಾಗೂ ಬೇಜವಾಬ್ದಾರಿ ಅಧಿಕಾರಿಗಳ ವರ್ತನೆಯನ್ನು ಟೀಕಿಸಿದರೆ ಅದು ಹೇಗೆ ಕಿರುಕುಳವಾಗುತ್ತದೆ. ಹಾಗೇನಾದರೂ ಆದರೆ ಸುಮ್ಮನೆ ಕೂರಲು ಸಾಧ್ಯವೇ ಎಂದು ಶಾಸಕ ಎಚ್.ಡಿ.ರೇವಣ್ಣ ಪ್ರಶ್ನಿಸಿದರು.&lt;/p&gt;&lt;p&gt;ಪಟ್ಟಣದ ಅವರ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ ಹಿನ್ನೆಲೆಯಲ್ಲಿ ತೆರಿಗೆ ಬಟ್ಟೆ ತೊಡಿಸುವ ವಿಚಾರದಲ್ಲಿ ನಡೆದ ಘಟನೆಗಳು ಹಾಗೂ ನನಗಾದ ಅವಮಾನವನ್ನು ಖಂಡಿಸಿ, ಹಕ್ಕುಚ್ಯುತಿ ಮಂಡಿಸಿದ್ದೇನೆ. ಈ ಕುರಿತು ಸರ್ಕಾರದ ವತಿಯಿಂದ ತನಿಖೆಯಾಗುತ್ತದೆ ಮತ್ತು ಸತ್ಯಾಂಶ ತಿಳಿಯುತ್ತದೆ. ಅವರದೇ ಪಕ್ಷ ಆಡಳಿತವಿರುವಾಗ ನಾ ಕಿರುಕುಳ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ತೇರಿಗೆ ಬಟ್ಟೆ ತೊಡಿಸಲು ಸಂಸದರು ೨ ಲಕ್ಷ ರುಪಾಯಿ ಕೊಟ್ಟ ವಿಚಾರ ನನಗೆ ತಿಳಿದಿಲ್ಲ. ನನಗೆ ಯಾರು ತಿಳಿಸಿದ್ದಾರೆ ಎಂದು ಪ್ರಶ್ನಿಸಿ, ನನಗೆ ತಿಳಿಯದ ವಿಷಯದಲ್ಲಿ ಇಲ್ಲ ಸಲದ ಆರೋಪ ಸರಿಯಲ್ಲವೆಂದರು.&lt;/p&gt;&lt;p&gt;ಹಾಸನದಲ್ಲಿ ಭೂ ಮಾಫಿಯಾ ವ್ಯಾಪಕವಾಗಿದೆ. ಏರ್&zwnj;ಪೋರ್ಟ್&zwnj;ಗೆ ಮೀಸಲಿಟ್ಟ ಜಾಗವನ್ನೂ ಕಬಳಿಸಲು ಹುನ್ನಾರ ನಡೆಯುತ್ತಿದೆ. ಭೂ ಮಾಫಿಯಾದಲ್ಲಿ ಯಾವ ಯಾವ ರಾಜಕಾರಣಿ ತೊಡಗಿಸಿಕೊಂಡಿದ್ದಾರೆ, ಅವರಿಗೆ ಯಾವ ಯಾವ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎನ್ನುವುದು ನನಗೆ ತಿಳಿಸಿದೆ. ಕಾಲ ಬಂದಾಗ ಎಲ್ಲವನ್ನೂ ದಾಖಲೆ ಸಹಿತ ನೀಡುತ್ತೇನೆ. ನನ್ನ ತಾಲೂಕಿನ ಕಲ್ಲೋಡೆಬಾರೆ ಕಾವಲಿನಲ್ಲಿ 95 ಸಾವಿರ ಮೆಟ್ರಿಕ್ ಟನ್ ಎಂ ಸ್ಯಾಂಡ್, ಜಲ್ಲಿ ಲೂಟಿ ಆಗಿದೆ.&lt;/p&gt;&lt;p&gt;ಜಿಲ್ಲಾಧಿಕಾರಿಗಳಿಗೆ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೇಳಿ. ಲೂಟಿಕೋರರು ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೋ ಆ ಪಕ್ಷದ ಜೊತೆಯಲ್ಲಿದ್ದು ಲೂಟಿ ಮಾಡಿಕೊಳ್ಳುತ್ತಾರೆ. ಹಂಗರಹಳ್ಳಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕಾನೂನು ಬದ್ಧವಾಗಿ ನಡೆಯುತ್ತಿದ್ದ ಅನಂತ್&zwnj;ಕುಮಾರ್ ಎಂಬುವವರ ಕ್ರಷರ್&zwnj;ನ ಜಾಗವನ್ನು ಈಗ ಡೀಮ್ಡ್&zwnj; ಫಾರೆಸ್ಟ್ ಪ್ರದೇಶಕ್ಕೆ ಸೇರಿದೆ ಎಂದು ನಿಲ್ಲಿಸುತ್ತಾರೆ. ಆದರೆ ಸಂಸದರ ಪಕ್ಕದಲ್ಲೇ ಇರುವವರು ಡೀಮ್ಡ್&zwnj; ಫಾರೆಸ್ಟ್ ಹಾಗೂ ಮೀಸಲು ಅರಣ್ಯಪ್ರದೇಶದಲ್ಲಿ ಕ್ರಷರ್ ನಡೆಸುತ್ತಿದ್ದರೂ ಜಿಲ್ಲಾಧಿಕಾರಿಗಳು ಸುಮ್ಮನಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;p&gt;ತಾಲೂಕು ಹುಲಿವಾಲ ಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭೂಮಿ ನೋಂದಣಿಯನ್ನು ನುಗ್ಗೆಹಳ್ಳಿಯಲ್ಲಿ ನೋಂದಣಿ ಕಚೇರಿಯಲ್ಲಿ ಮಾಡಿಸುತ್ತಾರೆ ನಮ್ಮೂರಿನಲ್ಲಿ ನೋಂದಣಿ ಕಚೇರಿ ಇಲ್ವ, ಈ ಕೆಲಸಕ್ಕೆ ಏನ್ನಂತೀರಿ ಎಂದರು. ಹಾಸನ ನಗರಸಭೆ ಚುನಾವಣೆ ಸಂದರ್ಭದಲ್ಲಿ ನೀವು ತಿಳಿಸಿದ ವ್ಯಕ್ತಿ ಬಿಜೆಪಿ ಜೊತೆ ಸೇರಿ ಯಾರಿಗೆ ಮತ ನೀಡಿದರು ಎಂಬುದು ಎಲ್ಲರಿಗೂ ಗೊತ್ತಿದೆ, ಈ ರೀತಿ ಮತ ನೀಡುವಾಗ ನೈತಿಕತೆ ಇರಬೇಕಲ್ವಾ ಎಂದು ಪ್ರಶ್ನಿಸಿದರು.&lt;/p&gt;&lt;p&gt;ತಾಲೂಕಿನ ಗ್ರಾಮ ಪಂಚಾಯಿತಿ ಒಂದರಲ್ಲಿ 17 ಲಕ್ಷ ರುಪಾಯಿಗಳ ಬೋಗಸ್ ಬಿಲ್ ಮಾಡಿದ ಕುರಿತು ಶಾಸಕ ಮಂಜಣ್ಣ ಅವರು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದಾರೆ. ಇದನ್ನ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕಿತ್ತು, ಏಕೆ ಮಾಡಿಲ್ಲ ಪ್ರಶ್ನಿಸಿ, ಒಬ್ಬ ಅಧಿಕಾರಿಯ ಬೇಜವಾಬ್ದಾರಿ ವರ್ತನೆಯನ್ನು ವಿಧಾನಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ ಎಂದು ಶಾಸಕ ಮಂಜಣ್ಣ ನಡೆಯನ್ನು ರೇವಣ್ಣ ಅವರು ಸಮರ್ಥಿಸಿದರು.&lt;/p&gt;&lt;p&gt;ಹಾಸನ ಮೆಡಿಕಲ್ ಕಾಲೇಜು, ಹಾಸನ ಹಾಗೂ ಹೊಳೆನರಸೀಪುರ ಫ್ಲೈಓವರ್&zwnj;ಗಳು ಎಷ್ಟು ವರ್ಷದಿಂದ ಬಾಕಿ ಉಳಿದಿತ್ತು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಡಳಿತದಲ್ಲಿ ಈ ಕಾರ್ಯಗಳಿಗೆ ಚಾಲನೆ ನೀಡಿ, ಜನರಿಗೆ ಉಪಯೋಗ ಆಗುವಂತಹ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಯಿತು. ಆದರೆ ಈಗ ಏರ್ಪೋರ್ಟಿಗೆಂದು ಭೂಸ್ವಾಧೀನ ಪಡಿಸಿಕೊಂಡ ಭೂಮಿಯನ್ನು ಕಬಳಿಸಲು ಹೊರಟಿದ್ದಾರೆ. ಇದನೆಲ್ಲ ನೋಡಿಕೊಂಡು ಹೇಗೆ ಸುಮ್ಮನಿರಲು ಸಾಧ್ಯ. ಕಾನೂನು ಬಾಹಿರ ಕೆಲಸ ಮಾಡುವುದನ್ನು ಪ್ರಶ್ನಿಸುವುದು ತಪ್ಪಾ, ಅಧಿಕಾರಿಗಳಿಗೆ ಲೂಟಿ ಮಾಡಿಕೊಂಡು ಇರಲು ಬಿಡಬೇಕು ಎಂದು ಮೂದಲಿಸಿದರು. ಅವರದೇ ಸರ್ಕಾರ ಇರುವಾಗ ನಾ ಹೇಗೆ ಕಿರುಕುಳ ನೀಡಲು ಸಾಧ್ಯ ರೀ ಅವರೇ ಅಧಿಕಾರಿಗಳು ಆಕಿಸಿಕೊಂಡು ಬರುತ್ತಾರೆ ಜತೆಗೆ ಇಂದಿನ ಆಡಳಿತದಿಂದ ಜನರಿಗೆ ಬಹಳ ಹಿಂಸೆಯಾಗುತ್ತಿದೆ. ಜನರ ಕೆಲಸ ಆಗುತ್ತಿಲ್ಲವೆಂದು ಬೇಸರದಿಂದ ನುಡಿದರು.&lt;/p&gt;&lt;h2&gt;&lt;strong&gt;ದನದ ದೊಡ್ಡಿಯಂತಾಗಿದೆ ಹಿಮ್ಸ್&zwnj;: ರೇವಣ್ಣ ಅಸಮಾಧಾನ&lt;/strong&gt;&lt;/h2&gt;&lt;p&gt;ಇತ್ತೀಚಿನ ದಿನಗಳಲ್ಲಿ ಹಾಸನದ ಹಿಮ್ಸ್ ಆಸ್ಪತ್ರೆ ದನದ ದೊಡ್ಡಿಯಂತಾಗಿದೆ. ಈ ಬಗ್ಗೆ ವ್ಯಾಪಕ ದೂರುಗಳಿದ್ದು ಜಿಲ್ಲಾಧಿಕಾರಿಗಳು ಇಂತಹವುಗಳನ್ನು ಪರಿಶೀಲಿಸಿ ಕ್ರಮ ತೆಗೆದುಕೊಂಡು ಬಡಜನರಿಗೆ ಅನುಕೂಲ ಕಲ್ಪಿಸಿಲಿ ಎಂದು ಸಲಹೆ ನೀಡಿದರು. ಹೊಳೆನರಸೀಪುರ ಆಸ್ಪತ್ರೆಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು, ಅಗತ್ಯಕ್ಕೆ ತಕ್ಕಷ್ಟು ವೈದ್ಯರನ್ನು ಹಾಕಿಸಿದ್ದೇನೆ. ಶಾಸಕರ ನಿಧಿಯಿಂದ ಕೆಲವು ಯಂತ್ರೋಪಕರಣ ಕೊಡಿಸಿದ್ದೇನೆ. ಇಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪ್ರಶಂಶಿಸಿದರು. ಡಿ ಗ್ರೂಪ್ ನೌಕರರನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆಯ ಅವಧಿ ಮುಗಿದು ಟೆಂಡರ್ ಹಾಕಿ ತಿಂಗಳು ಕಳೆದಿದ್ದರೂ ಜಿಲ್ಲಾಧಿಕಾರಿಗಳು ಇನ್ನೂ ಅನುಮೋದನೆ ನೀಡಿಲ್ಲ ಎಂದರು.&lt;/p&gt;]]></content:encoded>
            <category>hassan</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/hd-revanna-slams-officials-farmers-compensation-hassan-land-issue-gvd/articleshow-ecbvbgo"/>
        </item>
        <item>
            <title><![CDATA[ಹಾಸನ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ಲೋಕಾ ಅಧಿಕಾರಿಗಳಿಗೆ ಮನೆ ಬಾಗಿಲು ತೆರೆಯದ ಇಂಜಿನಿಯರ್ ಸತ್ಯಾನಾರಾಯಣ]]></title>
            <link>https://kannada.asianetnews.com/gallery/state/lokayukta-raid-in-bagalkot-and-hassan-engineer-satyanarayanadid-not-open-door-to-officers-eurvxdx</link>
            <guid isPermaLink="true">https://kannada.asianetnews.com/gallery/state/lokayukta-raid-in-bagalkot-and-hassan-engineer-satyanarayanadid-not-open-door-to-officers-eurvxdx</guid>
            <pubDate>Thu, 05 Mar 2026 08:18:50 +0530</pubDate>
            <description><![CDATA[&lt;p&gt;ಹಾಸನ ಮತ್ತು ಬಾಗಲಕೋಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪಾಲಿಕೆ ಇಂಜಿನಿಯರ್ ಬಾಗಿಲು ತೆರೆಯಲು ನಿರಾಕರಿಸಿದರೆ, ಬಾಗಲಕೋಟೆಯಲ್ಲಿ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjxxmwyptq63hmj5pd1qkyfq,imgname-loka-raid-hassan-1772678181846.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾಸನ ಮತ್ತು ಬಾಗಲಕೋಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪಾಲಿಕೆ ಇಂಜಿನಿಯರ್ ಬಾಗಿಲು ತೆರೆಯಲು ನಿರಾಕರಿಸಿದರೆ, ಬಾಗಲಕೋಟೆಯಲ್ಲಿ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ಹಾಸನ/ಬಾಗಲಕೋಟೆ: ಬೆಳ್ಳಂಬೆಳಗ್ಗೆ ಹಾಸನ ಹಾಗೂ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಹಾಸನದಲ್ಲಿ ಮಹಾನಗರಪಾಲಿಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸತ್ಯನಾರಾಯಣ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ಹಾಸನ ನಗರದ ರವೀಂದ್ರ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಡಿಎವೈಎಸ್ಫಿ ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಆದರೆ ಅಧಿಕಾರಿಗಳು ಮನೆ ಬಾಗಿಲು ತೆರೆಯದೇ ಒಳಗಡೆ ಕುಳಿತಿದ್ದು, ಲೋಕಾಯುಕ್ತ ಅಧಿಕಾರಿಗಳು ಮನೆ ಬಾಗಿಲು ತೆರೆಯುವುದಕ್ಕೆ ಹರಸಾಹಸ ಪಡುತ್ತಿದ್ದಾರೆ.&lt;/p&gt;&lt;img&gt;&lt;p&gt;ಮನೆ ಮೇಲೆ ಹೋಗಲು ಅಧಿಕಾರಿಗಳ ಹರಸಾಹಸಪಡುತ್ತಿದ್ದು, ಜೀಪ್ ಮೇಲೆ ಹತ್ತಿ ಮೊದಲನೆ ಮಹಡಿಗೆ ಹೋಗಿದ್ದಾರೆ. ನಂತರ ಬಾಗಿಲು ಬಡಿದರು ಮನೆಯಿಂದ ಯಾರೂ ಹೊರಗೆ ಬಂದಿಲ್ಲ. ಹೀಗಾಗಿ ಮನೆ ಬಾಗಿಲು ತೆಗೆಯುವುದಕ್ಕೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.&lt;/p&gt;&lt;img&gt;&lt;p&gt;ಕಳೆದ ಅರ್ಧ ಗಂಟೆಯಿಂದ ಅಧಿಕಾರಿ ಮನೆ ಮುಂದೆ ಲೋಕಾಯುಕ್ತ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಸತ್ಯನಾರಾಯಣ ಅವರು ಹಾಸನ ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್, ಇನ್ಸ್ ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ಹಾಗೆಯೇ ಬಾಗಲಕೋಟೆಯಲ್ಲೂ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ&zwnj; ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಹಾಗೂ ಬಾಗಲಕೋಟೆಯಲ್ಲಿರುವ ಮನೆಯ ಮೇಲೆ ದಾಳಿ ನಡೆದಿದೆ.&lt;/p&gt;&lt;img&gt;&lt;p&gt;ವಸಂತ ಸಹೋದರ ಭೀಮಸಿಂಗ್ ನಾಯಕ್ ಅವರ ಬಾಗಲಕೋಟೆ ಮನೆ ಮೇಲೆ ದಾಳಿ ನಡೆದಿದೆ. ಭೀಮಸಿಂಗ್ ನಾಯಕ ಬಾಗಲಕೋಟೆ ಡಿಎಆರ್&zwnj;ನಲ್ಲಿ ಎಎಸ್&zwnj;ಐ ಆಗಿದ್ದಾರೆ. ಬಾಗಲಕೋಟೆಯ ಪೋಸ್ಟಲ್&zwnj; ಕಾಲೋನಿಯಲ್ಲಿರುವ ಭೀಮಸಿಂಗ್ ಮನೆ ಮೇಲೆ ದಾಳಿ ನಡದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಲೋಕಾ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ&lt;/p&gt;&lt;img&gt;&lt;p&gt;ಹಾಗೆಯೇ ವಸಂತ ನಾಯಕ ಅವರ ಮೂಲ ಗ್ರಾಮ ಬಾಗಲಕೋಟೆ ತಾಲೂಕಿನ ಬಸವನಗರ ತಾಂಡಾದಲ್ಲಿರುವ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ ಲೋಕಾಯುಕ್ತ ಎಸ್ ಪಿ ಮಾನಿಂಗ್ ನಂದಗಾವಿ ಮಾರ್ಗದರ್ಶನದಲ್ಲಿ ಲೋಕಾ ಡಿವೈಎಸ್ ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಸಿದ್ಧಾಪುರ ಠಾಣೆ ಪೊಲೀಸರಿಗೀಗ ಕೇಸ್&zwnj;ಗಿಂತ 7 ಕೋಟಿ ಕಾಸು ಕಾಯುವುದೇ ಚಿಂತೆ&lt;/p&gt;]]></content:encoded>
            <category>hassan</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/lokayukta-raid-in-bagalkot-and-hassan-engineer-satyanarayanadid-not-open-door-to-officers-eurvxdx"/>
        </item>
        <item>
            <title><![CDATA[ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವ ಅಳಿಯ ಇಬ್ಬರೂ ನೀರುಪಾಲು]]></title>
            <link>https://kannada.asianetnews.com/state/man-and-his-nephew-both-died-while-trying-to-save-his-nephew-from-drowning/articleshow-fwtuwrc</link>
            <guid isPermaLink="true">https://kannada.asianetnews.com/state/man-and-his-nephew-both-died-while-trying-to-save-his-nephew-from-drowning/articleshow-fwtuwrc</guid>
            <pubDate>Mon, 20 Apr 2026 09:23:21 +0530</pubDate>
            <description><![CDATA[ಹಾಸನದಲ್ಲಿ ಕೆರೆಗೆ ಬಿದ್ದ ಅಳಿಯನನ್ನು ರಕ್ಷಿಸಲು ಹೋಗಿ ಮಾವ ಪ್ರಾಣ ಕಳೆದುಕೊಂಡರೆ, ರಬಕವಿ-ಬನಹಟ್ಟಿ ಹಾಗೂ ಕೊಪ್ಪಳದಲ್ಲಿ ಈಜಲು ಹೋದ ಬಾಲಕ ಮತ್ತು ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೇಸಿಗೆ ರಜೆಯಲ್ಲಿ ನಡೆದ ಈ ಸರಣಿ ದುರಂತಗಳು ಹಲವು ಕುಟುಂಬಗಳಲ್ಲಿ ಶೋಕವನ್ನುಂಟು ಮಾಡಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpmfymcyktdaj8182pfj8jba,imgname-hassan-alia-and-sodara-mava-death-1776656798110.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ಸಾವು&lt;/strong&gt;&lt;/h2&gt;&lt;p&gt;ಹಾಸನ: ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಮನಕಲುಕುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಎನ್&zwnj;.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ಬಾಲಕ ಪ್ರತೀಕ್ ಹಾಗೂ ಬಾಲಕನ ಮಾವ 45 ವರ್ಷದ ಪ್ರಭಾಕರ್ ಎಂದು ಗುರುತಿಸಲಾಗಿದೆ.&lt;/p&gt;&lt;h3&gt;&lt;strong&gt;ಆಗಿದ್ದೇನು?&lt;/strong&gt;&lt;/h3&gt;&lt;p&gt;ಬಾಲಕ ಪ್ರತೀಕ್ ಬೇಸಿಗೆ ರಜೆಯ ಹಿನ್ನೆಲೆ ಮಾವ ಪ್ರಭಾಕರ್ ಅವರ ಮನೆಗೆ ಬಂದಿದ್ದ. ಮಾವನ ಜೊತೆಗೆ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರತೀಕ್ ಆಯತಪ್ಪಿ ಕೆರೆಗೆ ಬಿದ್ದಿದ್ದಾನೆ. ಕಾಲು ಜಾರಿ ಕೆರೆಗೆ ಬಿದ್ದ ಪ್ರತೀಕ್&zwnj;ನನ್ನು ರಕ್ಷಿಸಲು ಮಾವ ಪ್ರಭಾಕರ್&zwnj; ಕೆರೆಗೆ ಹಾರಿದ್ದು,&lt;/p&gt;&lt;p&gt;ಈಜು ಬಾರದ ಕಾರಣ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರತೀಕ್ ಪ್ರಭಾಕರ್ ಅವರ ಸೋದರಿಯ ಮಗನಾಗಿದ್ದು, ಬೇಸಿಗೆ ರಜೆ ಹಿನ್ನೆಲೆ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಇಬ್ಬರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದು, ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಾವ ಅಳಿಯ ಇಬ್ಬರನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h3&gt;&lt;strong&gt;ಕೃಷ್ಣಾ ನದಿಯಲ್ಲಿ ಮುಳುಗಿ ಬಾಲಕ ಸಾವು&lt;/strong&gt;&lt;/h3&gt;&lt;p&gt;ರಬಕವಿ-ಬನಹಟ್ಟಿ ತಾಲೂಕಿನ ಕೃಷ್ಣಾ ನದಿ ಜಾಕವೆಲ್ ಹತ್ತಿರ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಹುಬ್ಬಳ್ಳಿಯ ರಾಹುಲ್ ಪ್ರಕಾಶ ಅಜ್ಜನವರ(11) ಮೃತ ಬಾಲಕ. ಶಾಲೆಗೆ ರಜೆಯ ಕಾರಣ ಬಾಲಕ ರಬಕವಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಬೆಳಗಿನ ಜಾವ ಸ್ನಾನಕ್ಕೆಂದು ತೆರಳಿದಾಗ ನೂರಾರು ಜನರ ಮಧ್ಯೆ ಬಾಲಕ ನೀರಿಗಿಳಿದು ಮುಳುಗಿರುವುದು ಯಾರ ಗಮನಕ್ಕೂ ಬಂದಿಲ್ಲ. ಬಾಲಕನ ಜೊತೆಗೆ ಬಂದಿದ್ದ ಸಂಬಂಧಿ ಹುಡುಕಾಟ ನಡೆಸಿದಾಗ ಬಾಲಕ ನೀರಿಗಿಳಿದ ವಿಚಾರ ತಿಳಿದಿದ್ದು,ಸ್ಥಳದಲ್ಲಿದ್ದ ಜನರು ಹುಡುಕಾಡಿದರೂ ಸಿಕ್ಕಿಲ್ಲ. ನಂತರ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೀರಿನಿಂದ ಶವ ಹೊರಕ್ಕೆ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;h3&gt;&lt;strong&gt;ಈಜಲು ಹೋಗಿ ವಿದ್ಯಾರ್ಥಿ ಸಾವು&lt;/strong&gt;&lt;/h3&gt;&lt;p&gt;ಹಾಗೆಯೇ ಇದೇ ರೀತಿಯ ಮತ್ತೊಂದು ಘಟನೆ ಕೊಪ್ಪಳ ಜಿಲ್ಲೆಯಲ್ಲಿಯೂ ನಡೆದಿದೆ. ದದೇಗಲ್ ಬಳಿ ಇರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ಕುಕನೂರು ತಾಲೂಕಿನ ಮನ್ನಾಪುರ ಗ್ರಾಮದ ಆಕಾಶ ಹರಿಜನ(18) ಎಂಬ ವಿದ್ಯಾರ್ಥಿ ಕಾಲೇಜ್ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಬೆಳಗ್ಗೆ 11 ಗಂಟೆಗೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಮಧ್ಯಾಹ್ನ 3.30ಕ್ಕೆ ಪತ್ತೆಯಾಗಿದೆ. ಇಷ್ಟೆಲ್ಲ ಆದರೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಶವವಿಟ್ಟು ಪ್ರತಿಭಟನೆಗೆ ಮುಂದಾಗಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪತಿಯ ಅಕ್ರಮ ಸಂಬಂಧ ಪತ್ತೆ ಮಾಡಿದ್ದ ಪತ್ನಿ ನಿಗೂಢ ಸಾವು: ಪೋಷಕರಿಂದ ಕೊಲೆ ಆರೋಪ&lt;/strong&gt;&lt;/p&gt;]]></content:encoded>
            <category>hassan</category>
            <dc:creator>Anusha Kb</dc:creator>
            <atom:link href="https://kannada.asianetnews.com/state/man-and-his-nephew-both-died-while-trying-to-save-his-nephew-from-drowning/articleshow-fwtuwrc"/>
        </item>
        <item>
            <title><![CDATA[ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ: ಸೋದರಿಯ ಅಗಲಿಕೆಗೆ ಕಂಬನಿ ಮಿಡಿದ ‘ದೊಡ್ಡಗೌಡರು’]]></title>
            <link>https://kannada.asianetnews.com/state/former-prime-minister-hd-deve-gowda-sister-javaramma-passes-away-hassan-news-sat/articleshow-g8bd84l</link>
            <guid isPermaLink="true">https://kannada.asianetnews.com/state/former-prime-minister-hd-deve-gowda-sister-javaramma-passes-away-hassan-news-sat/articleshow-g8bd84l</guid>
            <pubDate>Thu, 19 Mar 2026 16:07:30 +0530</pubDate>
            <description><![CDATA[&lt;p&gt;ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ತಂಗಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಹೋದರಿಯ ನಿಧನಕ್ಕೆ ದೇವೇಗೌಡರು ಭಾವುಕರಾಗಿದ್ದು, ಅವರ ಅಂತ್ಯಕ್ರಿಯೆ ಸ್ವಗ್ರಾಮ ಬಸವನಾಯಕನಹಳ್ಳಿಯಲ್ಲಿ ನಡೆಯಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km2tk1yjxw2tfrf1vx8d8hms,imgname-hd-deve-gowda-sister-javaramma-passes-away-1773916489682.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ (ಮಾ.19): ಮಾ&lt;/strong&gt;ಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. ದೇವೇಗೌಡರ ಪ್ರೀತಿಯ ತಂಗಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.&lt;/p&gt;&lt;h2&gt;&lt;strong&gt;ವಯೋಸಹಜ ಕಾಯಿಲೆಯಿಂದ ಸಾವು:&lt;/strong&gt;&lt;/h2&gt;&lt;p&gt;ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಜವರಮ್ಮ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಬಸವನಾಯಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.&lt;/p&gt;&lt;h2&gt;&lt;strong&gt;ಕಂಬನಿ ಮಿಡಿದ ದೊಡ್ಡಗೌಡರು:&lt;/strong&gt;&lt;/h2&gt;&lt;p&gt;ತಮ್ಮ ಆಪ್ತ ಸಹೋದರಿಯ ನಿಧನದ ವಾರ್ತೆ ಕೇಳುತ್ತಿದ್ದಂತೆಯೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀವ್ರ ಭಾವುಕರಾಗಿದ್ದಾರೆ. ರಾಜಕೀಯವಾಗಿ ಎಷ್ಟೇ ದೊಡ್ಡ ಮಟ್ಟಕ್ಕೆ ಬೆಳೆದಿದ್ದರೂ ದೇವೇಗೌಡರು ತಮ್ಮ ಹಳ್ಳಿಯ ಸೊಗಡು ಮತ್ತು ಕುಟುಂಬದ ಬಾಂಧವ್ಯವನ್ನು ಎಂದಿಗೂ ಮರೆತವರಲ್ಲ. ಅದರಲ್ಲೂ ತಂಗಿ ಜವರಮ್ಮ ಅವರ ಮೇಲೆ ಗೌಡರಿಗೆ ವಿಶೇಷ ಪ್ರೀತಿ ಇತ್ತು. ತಮ್ಮ ತಂಗಿಯ ಅಗಲಿಕೆಗೆ ಅವರು ಕಂಬನಿ ಮಿಡಿದಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ಕುಟುಂಬದ ಆಧಾರಸ್ತಂಭ:&lt;/strong&gt;&lt;/h2&gt;&lt;p&gt;ಜವರಮ್ಮ ಅವರು ಹಳೇ ಮೈಸೂರು ಭಾಗದ ಸಂಪ್ರದಾಯಬದ್ಧ ಕೃಷಿ ಕುಟುಂಬದ ಹಿನ್ನೆಲೆಯವರು. ಸರಳ ಜೀವನ ನಡೆಸುತ್ತಿದ್ದ ಅವರು, ದೇವೇಗೌಡರ ರಾಜಕೀಯ ಏಳುಬೀಳುಗಳ ಸಂದರ್ಭದಲ್ಲಿ ಕುಟುಂಬದ ನೈತಿಕ ಬೆಂಬಲವಾಗಿ ನಿಂತಿದ್ದರು. ಎಚ್.ಡಿ. ರೇವಣ್ಣ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರೂ ಕೂಡ ಅತ್ತೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೇವೇಗೌಡರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.&lt;/p&gt;&lt;h2&gt;&lt;strong&gt;ಅಂತ್ಯಕ್ರಿಯೆಯ ವಿವರ:&lt;/strong&gt;&lt;/h2&gt;&lt;p&gt;ಜವರಮ್ಮ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಅವರ ಸ್ವಗ್ರಾಮವಾದ ಬಸವನಾಯಕನಹಳ್ಳಿಗೆ ರವಾನಿಸಲಾಗಿದೆ. ಇಂದು ಸಂಜೆ ಹೊಳೆನರಸೀಪುರ ತಾಲ್ಲೂಕಿನ ಬಸವನಾಯಕನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗ್ರಾಮದ ಹಿರಿಯರು, ಬಂಧು-ಮಿತ್ರರು ಹಾಗೂ ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ.&lt;/p&gt;&lt;p&gt;ದೇವೇಗೌಡರ ಕುಟುಂಬದಲ್ಲಿ ಹಿರಿಯ ಜೀವವೊಂದರ ನಿರ್ಗಮನ ಕುಟುಂಬದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಹಾಸನ ಜಿಲ್ಲೆಯ ಗಣ್ಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಜವರಮ್ಮ ಅವರ ಆತ್ಮಕ್ಕೆ ಶಾಂತಿ ಕೋರಿ ಸಂದೇಶಗಳನ್ನು ಕಳುಹಿಸಿದ್ದಾರೆ.&lt;/p&gt;]]></content:encoded>
            <category>hassan</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/state/former-prime-minister-hd-deve-gowda-sister-javaramma-passes-away-hassan-news-sat/articleshow-g8bd84l"/>
        </item>
        <item>
            <title><![CDATA[Hassan: ನಿಧಾನವಾಗಿ ಚಲಿಸು ಎಂದಿದ್ದಕ್ಕೆ ಕಾರ್ ಗುದ್ದಿಸಿ ಯುವಕನ ಭೀಕರ ಹತ್ಯೆ; ಮೂವರು ಪಾರು]]></title>
            <link>https://kannada.asianetnews.com/karnataka-districts/young-man-brutally-murdered-after-being-hit-by-car-holenarasipur-hassan-mrq/articleshow-idvbfpf</link>
            <guid isPermaLink="true">https://kannada.asianetnews.com/karnataka-districts/young-man-brutally-murdered-after-being-hit-by-car-holenarasipur-hassan-mrq/articleshow-idvbfpf</guid>
            <pubDate>Wed, 04 Mar 2026 07:51:17 +0530</pubDate>
            <description><![CDATA[&lt;p&gt;ಹೊಳೆನರಸೀಪುರದ ಸೂರನಹಳ್ಳಿ ಬಳಿ, ನಿಧಾನವಾಗಿ ಚಲಿಸುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಕೋಪಗೊಂಡ ಕಾರು ಚಾಲಕನೊಬ್ಬ ನಾಲ್ವರ ಮೇಲೆ ಕಾರು ಹರಿಸಿದ್ದಾನೆ. ಈ ಘಟನೆಯಲ್ಲಿ ಮನು ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjva21greqr1ybnfrsxnfy60,imgname-hassan-murder-1772590532120.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹೊಳೆನರಸೀಪುರ: &lt;/strong&gt;ಪಟ್ಟಣದ ಪುರಸಭೆ ವ್ಯಾಪ್ತಿಯ ಸೂರನಹಳ್ಳಿ ಸಮೀಪ ಬುದ್ಧಿಮಾತು ಹೇಳಿದ ವ್ಯಕ್ತಿಯ ಮೇಲೆ ಆಕ್ರೋಶಗೊಂಡ ಕಾರಿನ ಚಾಲಕ ಕಾರಿನಿಂದ ನಡೆಸಿದ ಡೆಡ್ಲಿ ಎಟ್ಯಾಕ್ ಪರಿಣಾಮ ಮನು(22) ಎಂಬ ವ್ಯಕ್ತಿ ಸ್ಥಳದಲೇ ಸಾವನಪ್ಪಿ, ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ 11.45 ಸುಮಾರಿನಲ್ಲಿ ನಡೆದಿದೆ.&lt;/p&gt;&lt;p&gt;ಸೂರನಹಳ್ಳಿ ಗ್ರಾಮದ ರಸ್ತೆ ಬದಿ ಮನು, ಅಭಿಷೇಕ, ರಾಕೇಶ್ ಹಾಗೂ ಕುಶಾಲ್, ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿ, ಸ್ವಗ್ರಾಮದ ರಸ್ತೆ ಬದಿ ಮಾತನಾಡುತ್ತಿದ್ದ ವೇಳೆ ಪಟ್ಟಣದಿಂದ ಕೆ.ಎ.01 ಎಂ.ಎಫ್.2883 ಸಂಖ್ಯೆಯ ಕಾರು ವೇಗದಿಂದ ಚಲಿಸಿದೆ. ಅದನ್ನು ಕಂಡ ಮನು ಮತ್ತು ಗೆಳೆಯರು ನಿಧಾನವಾಗಿ ಚಲಿಸುವಂತೆ ಬುದ್ಧಿಮಾತು ಹೇಳಿದ್ದಾರೆ.&amp;nbsp;&lt;/p&gt;&lt;h2&gt;&lt;strong&gt;ನಾಲ್ವರ ಮೇಲೆ ಕಾರ್ ನುಗ್ಗಿಸಿದ ಚಾಲಕ&lt;/strong&gt;&lt;/h2&gt;&lt;p&gt;ಆದರೆ ಕಾರಿನ ಚಾಲಕ ಬುದ್ಧಿವಾದವನ್ನು ತಪ್ಪಾಗಿ ಆರ್ಥೈಸಿಕೊಂಡು ಮುಂದಕ್ಕೆ ಚಲಿಸುತ್ತಿದ್ದ ಕಾರನ್ನು ತಿರುಗಿಸಿಕೊಂಡು ವೇಗವಾಗಿ ಬಂದು ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ನುಗ್ಗಿಸಿದ್ದಾನೆ. ಡಿಕ್ಕಿಯ ರಭಸಕ್ಕೆ ನಾಲ್ವರಲ್ಲಿ ಮನು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಮತ್ತು ಜತೆಗಿದ್ದ ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ತೀವ್ರವಾಗಿ ಗಾಯಗೊಂಡಿದ್ದು, ಹಾಸನದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ತಾನೇ ಹೆಣೆದ ಬಲೆಯಲ್ಲಿ ಸಿಲುಕಿದ್ದೇಗೆ ಐನಾತಿ ಪ್ರಿಯಾಂಕಾ ಆಂಟಿ? ನೌಟಂಕಿ ಲೇಡಿ ಎಡವಿದ್ದೆಲ್ಲಿ?&lt;/strong&gt;&lt;/p&gt;&lt;h3&gt;&lt;strong&gt;ಕಾರ್ ವಶಕ್ಕೆ, ಚಾಲಕ ಪರಾರಿ&lt;/strong&gt;&lt;/h3&gt;&lt;p&gt;ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತ ಮಾಡಿದ ಕಾರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ತಲೆ ಮರೆಸಿಕೊಂಡಿರುವ ಕಾರು ಚಾಲಕ ಪತ್ತೆಗಾಗಿ ಪೋಲಿಸರು ಕ್ರಮಕೈಗೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ನಾಪತ್ತೆಯಾಗಿದ್ದ ಇಬ್ಬರು ಮುಸ್ಲಿಂ ಯುವತಿಯರು ಹಿಂದೂ ಸೋದರರನ್ನು ಮದುವೆಯಾಗಿ ಪ್ರತ್ಯಕ್ಷ: ರಕ್ಷಣೆ ಕೋರಿ ಮನವಿ&lt;/strong&gt;&lt;/p&gt;]]></content:encoded>
            <category>hassan</category>
            <dc:creator>Mahmad Rafik</dc:creator>
            <atom:link href="https://kannada.asianetnews.com/karnataka-districts/young-man-brutally-murdered-after-being-hit-by-car-holenarasipur-hassan-mrq/articleshow-idvbfpf"/>
        </item>
        <item>
            <title><![CDATA[ಬೆಟ್ಟದ ಬೈರವೇಶ್ವರ ಟೆಂಪಲ್ ಆವರಣದಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್; ಫೋಟೋಗ್ರಾಫರ್‌ಗಳ ಹಲ್ಲೆಗೆ ಹೊರಬಿತ್ತು ಕಾರಣ!]]></title>
            <link>https://kannada.asianetnews.com/karnataka-districts/sakaleshpura-photographers-attacked-during-pre-wedding-shoot-at-bettada-bhairaveshwara-temple-sat/articleshow-k59zrbr</link>
            <guid isPermaLink="true">https://kannada.asianetnews.com/karnataka-districts/sakaleshpura-photographers-attacked-during-pre-wedding-shoot-at-bettada-bhairaveshwara-temple-sat/articleshow-k59zrbr</guid>
            <pubDate>Fri, 27 Mar 2026 20:57:42 +0530</pubDate>
            <description><![CDATA[&lt;p&gt;ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್&zwnj;ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿದ್ದೇ ಗಲಾಟೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmqya0hbfb82radr6346rfmz,imgname-hassan-temple-1774625030698.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ (ಮಾ.27): ಪ್ರ&lt;/strong&gt;ಕೃತಿ ಸೌಂದರ್ಯಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಂದರ ಪ್ರವಾಸಿ ತಾಣವೊಂದು ಇಂದು ಬೆಳ್ಳಂಬೆಳಗ್ಗೆ ರಣರಂಗವಾಗಿ ಮಾರ್ಪಟ್ಟಿತ್ತು. ಪ್ರಸಿದ್ಧ ಬೆಟ್ಟದ ಬೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ (Pre-wedding shoot) ನಡೆಸುತ್ತಿದ್ದ ಫೋಟೋಗ್ರಾಫರ್&zwnj;ಗಳ ಮೇಲೆ ಸ್ಥಳೀಯರು ಎಂದು ಹೇಳಿಕೊಂಡ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.&lt;/p&gt;&lt;h3&gt;&lt;strong&gt;ಘಟನೆಯ ಹಿನ್ನೆಲೆ:&lt;/strong&gt;&lt;/h3&gt;&lt;p&gt;ಮಲೆನಾಡಿನ ಸುಂದರ ಪರಿಸರದಲ್ಲಿ ತಮ್ಮ ಮದುವೆಯ ನೆನಪುಗಳನ್ನು ಸೆರೆಹಿಡಿಯಲು ನವಜೋಡಿಯೊಂದು ಫೋಟೋಗ್ರಾಫರ್&zwnj;ಗಳ ತಂಡದೊಂದಿಗೆ ಸಕಲೇಶಪುರ ತಾಲೂಕಿನ ಬೆಟ್ಟದ ಬೈರವೇಶ್ವರ ದೇವಸ್ಥಾನಕ್ಕೆ ಬಂದಿತ್ತು. ಮುಂಜಾನೆಯ ಮಂಜಿನ ನಡುವೆ ಶೂಟಿಂಗ್ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಕೆಲ ಸ್ಥಳೀಯ ಯುವಕರು, 'ಇಲ್ಲಿ ಯಾಕೆ ಶೂಟಿಂಗ್ ಮಾಡುತ್ತಿದ್ದೀರಿ?' ಎಂದು ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ಫೋಟೋಗ್ರಾಫರ್&zwnj;ಗಳು ಮತ್ತು ಸ್ಥಳೀಯ ಯುವಕರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.&lt;/p&gt;&lt;h2&gt;&lt;strong&gt;ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುವು:&lt;/strong&gt;&lt;/h2&gt;&lt;p&gt;ಆರಂಭದಲ್ಲಿ ಕೇವಲ ಮಾತಿನ ಚಕಮಕಿಯಾಗಿದ್ದ ಈ ಘಟನೆ, ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿದೆ. ಸ್ಥಳೀಯರು ಎಂದು ಹೇಳಿಕೊಂಡ ಗುಂಪು ಫೋಟೋಗ್ರಾಫರ್&zwnj;ಗಳ ಮೇಲೆ ಏಕಾಏಕಿ ಹಲ್ಲೆ ನಡೆಸಲು ಮುಂದಾಗಿದೆ. 'ಯಾಕಪ್ಪ ಹೊಡಿತಾ ಇದ್ದೀರಿ? ನಮ್ಮ ತಪ್ಪೇನಿದೆ?' ಎಂದು ಫೋಟೋಗ್ರಾಫರ್&zwnj;ಗಳು ಅಸಹಾಯಕತೆಯಿಂದ ಪ್ರಶ್ನಿಸಿದರೂ ಕೇಳದ ಉದ್ರಿಕ್ತ ಗುಂಪು, ಗೂಂಡಾಗಿರಿ ಪ್ರದರ್ಶಿಸಿ ಅವರ ಮೇಲೆ ಹಿಗ್ಗಾಮುಗ್ಗಾ ಕೈ ಮಾಡಿದೆ ಎನ್ನಲಾಗಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ದೇವಸ್ಥಾನದ ಪವಿತ್ರ ಆವರಣದಲ್ಲಿ ಗಲಾಟೆಯ ವಾತಾವರಣ ನಿರ್ಮಾಣವಾಗಿತ್ತು.&lt;/p&gt;&lt;h2&gt;&lt;strong&gt;ಹಲ್ಲೆಗೆ ಅಸಲಿ ಕಾರಣವೇನು?&lt;/strong&gt;&lt;/h2&gt;&lt;p&gt;ಹಲ್ಲೆಯ ಬಳಿಕ ಎರಡೂ ಕಡೆಯವರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಧಾವಿಸಿದ್ದು, ಪರಸ್ಪರ ದೂರು ನೀಡಿದ್ದಾರೆ. ಫೋಟೋಗ್ರಾಫರ್&zwnj;ಗಳು ತಮಗೆ ಅನ್ಯಾಯವಾಗಿ ಹೊಡೆದಿದ್ದಾರೆ ಎಂದು ದೂರಿದ್ದಾರೆ. ಆದರೆ, ಸ್ಥಳೀಯರು ತಾವು ಹಲ್ಲೆ ಮಾಡುವುದಕ್ಕೆ ಕಾರಣವೇನು ಎಂದು ರಿವೀಲ್ ಮಾಡಿದ್ದಾರೆ. ಈ ಪ್ರಸಿದ್ಧ ದೇವಸ್ಥಾನದ ಬಳಿ ನಿಯಮ ಎಲ್ಲಿಂದಲೋ ಬರುವ ಫೋಟೋ ಶೂಟ್ ಮಾಡಿಸಿಕೊಳ್ಳುವವರು ಇಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಇನ್ನು ಫೋಟೋಗ್ರಾಫರ್&zwnj;ಗಳಿಗೆ ನಿಯಮ ಪಾಲನೆಗೆ ಹೇಳಿದರೂ ಕೇಳದೆ ಪುನಃ ಹೊಸ ಆರ್ಡರ್&zwnj;ಗಳನ್ನು ತೆಗೆದುಕೊಂಡು ವಾಪಸ್ ಇಲ್ಲಿಗೇ ಬರುತ್ತಾರೆ. ಇದೀಗ ಹಲ್ಲೆಗೆ ಒಳಗಾದ ಫೋಟೋಗ್ರಾಫರ್&zwnj;ಗಳು ಹೊಸ ಜೋಡಿಗಳಿಗೆ ದೇವಾಲಯ ಆವರಣದಲ್ಲಿ ಚಪ್ಪಲಿ ಹಾಗೂ ಶೂ ಹಾಕಿಕೊಂಡು ಫೋಟೋ ಶೂಟಿಂಗ್ ಮಾಡಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಹೀಗಾಗಿ, ಹಲ್ಲೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಪ್ರವಾಸಿಗರಲ್ಲಿ ಆತಂಕ:&lt;/strong&gt;&lt;/h3&gt;&lt;p&gt;ಸಕಲೇಶಪುರ ಮತ್ತು ಸುತ್ತಮುತ್ತಲಿನ ಬೆಟ್ಟಗುಡ್ಡಗಳು ಪ್ರೀ ವೆಡ್ಡಿಂಗ್ ಶೂಟಿಂಗ್&zwnj;ಗೆ ಹೇಳಿ ಮಾಡಿಸಿದ ಜಾಗಗಳಾಗಿವೆ. ಪ್ರತಿ ದಿನ ನೂರಾರು ತಂಡಗಳು ಇಲ್ಲಿಗೆ ಆಗಮಿಸುತ್ತವೆ. ಆದರೆ, ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಇಂತಹ ಸಂಘರ್ಷಗಳು ಮರುಕಳಿಸುತ್ತಿರುವುದು ಪ್ರವಾಸಿಗರಲ್ಲಿ ಭೀತಿ ಮೂಡಿಸಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಇಂತಹ ಜಾಗಗಳಲ್ಲಿ ಸೂಕ್ತ ನಿಯಮಗಳನ್ನು ರೂಪಿಸಿ, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.&lt;/p&gt;]]></content:encoded>
            <category>hassan</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/sakaleshpura-photographers-attacked-during-pre-wedding-shoot-at-bettada-bhairaveshwara-temple-sat/articleshow-k59zrbr"/>
        </item>
        <item>
            <title><![CDATA[ಹಾಸನ: ಪ್ರೀತಿಸಿದ ವಿವಾಹಿತೆ ಜೊತೆ ಓಡಿ ಹೋಗಿ ಕಾರಲ್ಲಿ ತಾಳಿ ಕಟ್ಟಿದ ಪ್ರಿಯಕರ! 8 ವರ್ಷದ ವಿವಾಹ ತ್ಯಜಿಸಿದ ಮಹಿಳೆ!]]></title>
            <link>https://kannada.asianetnews.com/karnataka-districts/hassan-shocker-married-woman-elopes-with-lover-marries-him-inside-car-video-goes-viral-gdp/articleshow-kbkha5z</link>
            <guid isPermaLink="true">https://kannada.asianetnews.com/karnataka-districts/hassan-shocker-married-woman-elopes-with-lover-marries-him-inside-car-video-goes-viral-gdp/articleshow-kbkha5z</guid>
            <pubDate>Mon, 13 Apr 2026 19:22:49 +0530</pubDate>
            <description><![CDATA[ಹಾಸನದಲ್ಲಿ ಎಂಟು ವರ್ಷಗಳ ವಿವಾಹಿತ ಮಹಿಳೆಯೊಬ್ಬಳು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಸಾಂತ್ವನ ಕೇಂದ್ರದಿಂದ ಬಂದ ಕೆಲವೇ ಸಮಯದಲ್ಲಿ ಆಕೆ ಪರಾರಿಯಾಗಿ, ಕಾರಿನಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kp3htb3qd7cyc94wy4x4ctzx,imgname-married-woman-elopes-with-lover-in-hassan-karnataka-1776088329335.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ:&lt;/strong&gt; ಜಿಲ್ಲೆಯಲ್ಲಿ ಅಚ್ಚರಿಗೊಳಿಸುವಂತೆಯೇ ಚರ್ಚೆಗೆ ಕಾರಣವಾದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬಳು ತನ್ನ ಗಂಡನನ್ನು ಬಿಟ್ಟು, ರಾತ್ರೋರಾತ್ರಿ ಪ್ರಿಯಕರನೊಂದಿಗೆ ಪರಾರಿಯಾಗಿ, ಕಾರಿನಲ್ಲೇ ಮದುವೆಯಾಗಿರುವ ಘಟನೆ ಹಾಸನದ ಗೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.&lt;/p&gt;&lt;p&gt;ಮೂಲಗಳ ಪ್ರಕಾರ, ಈ ಮಹಿಳೆಗೆ ಸುಮಾರು ಎಂಟು ವರ್ಷಗಳ ಹಿಂದೆ ತನ್ನ ಸಂಬಂಧಿಕನೊಬ್ಬನೊಂದಿಗೆ ವಿವಾಹವಾಗಿತ್ತು. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಾಗದೆ ಗಂಡ-ಹೆಂಡತಿ ನಡುವೆ ಪದೇಪದೇ ಕಲಹಗಳು ನಡೆಯುತ್ತಿದ್ದವು. ಈ ನಡುವೆ ಮಹಿಳೆಗೆ ಮತ್ತೊಬ್ಬನೊಂದಿಗೆ ಪ್ರೇಮ ಸಂಬಂಧವೂ ಇತ್ತು.&lt;/p&gt;&lt;h2&gt;ಕುಟುಂಬ ಮಧ್ಯಸ್ಥಿಕೆ ಮಾಡಿದ್ರು ಸರಿ ಹೋಗಿಲ್ಲ&lt;/h2&gt;&lt;p&gt;ಈ ಸಂಬಂಧ ಕುಟುಂಬಸ್ಥರು ಹಲವು ಬಾರಿ ಮಧ್ಯಸ್ಥಿಕೆ ವಹಿಸಿ ರಾಜಿ ಪಂಚಾಯಿತಿ ನಡೆಸಿ, ಮಹಿಳೆಯನ್ನು ಗಂಡನೊಂದಿಗೆ ಜೀವನ ಮುಂದುವರಿಸಲು ಮನವೊಲಿಸಲು ಪ್ರಯತ್ನಿಸಿದ್ದರು. ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿ ಗೆರೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ನಡುವೆ ಮಾತುಕತೆ ನಡೆಸಲಾಗಿತ್ತು. ಬಳಿಕ ಪೊಲೀಸರೇ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೂ ಕಳುಹಿಸಿ, ಕುಟುಂಬ ಜೀವನ ಸರಿಪಡಿಸುವ ಪ್ರಯತ್ನ ಮಾಡಿದ್ದರು.&lt;/p&gt;&lt;h2&gt;ರಾತ್ರೋ ರಾತ್ರಿ ಪರಾರಿ!&lt;/h2&gt;&lt;p&gt;ಈ ಎಲ್ಲ ಸತತ ಪ್ರಯತ್ನಗಳ ಬಳಿಕವೂ ಮಹಿಳೆ &ldquo;ನಾನು ಗಂಡನೊಂದಿಗೆ ಬದುಕುತ್ತೇನೆ&rdquo; ಎಂದು ನಂಬಿಕೆ ಮೂಡಿಸಿದಳು. ಆದರೆ ಅದು ಕೇವಲ ನಾಟಕವಾಗಿದ್ದು, ಸಾಂತ್ವನ ಕೇಂದ್ರದಿಂದ ಗಂಡನ ಮನೆಗೆ ಮರಳಿದ ಕೆಲವೇ ಸಮಯದಲ್ಲಿ ತನ್ನ ಪ್ರಿಯಕರನನ್ನು ಸಂಪರ್ಕಿಸಿ, ರಾತ್ರೋರಾತ್ರಿ ಆತನೊಂದಿಗೆ ಪರಾರಿಯಾಗಿದ್ದಾಳೆ.&lt;/p&gt;&lt;p&gt;ಪರಾರಿಯಾದ ನಂತರ, ಮಹಿಳೆ ತನ್ನ ಪ್ರಿಯಕರನೊಂದಿಗೆ ಕಾರಿನಲ್ಲೇ ಮದುವೆಯಾಗಿದ್ದಾಳೆ. ಕಾರಿನೊಳಗೇ ಪ್ರಿಯಕರನು ಆಕೆಗೆ ತಾಳಿ ಕಟ್ಟಿದ್ದು, ಕಾಲಿಗೆ ಕಾಲುಂಗುರ ತೊಡಿಸಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಅದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.&lt;/p&gt;&lt;p&gt;ಈ ಘಟನೆಯಿಂದ ಮಹಿಳೆಯ ಕುಟುಂಬಸ್ಥರು ಮತ್ತು ಗಂಡ ಪ್ರಕಾಶ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ತನ್ನನ್ನು ಮೋಸಗೊಳಿಸಲಾಗಿದೆ ಎಂದು ಪತಿ ಆರೋಪಿಸಿದ್ದು, ಈ ಪ್ರಕರಣದ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ, ಹಾಸನದಲ್ಲಿ ನಡೆದ ಈ ಘಟನೆ ದಾಂಪತ್ಯ ಸಂಬಂಧಗಳ ವಿಶ್ವಾಸ, ಕುಟುಂಬ ವ್ಯವಸ್ಥೆ ಹಾಗೂ ಸಾಮಾಜಿಕ ಮೌಲ್ಯಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.&lt;/p&gt;]]></content:encoded>
            <category>hassan</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/hassan-shocker-married-woman-elopes-with-lover-marries-him-inside-car-video-goes-viral-gdp/articleshow-kbkha5z"/>
        </item>
        <item>
            <title><![CDATA[ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!]]></title>
            <link>https://kannada.asianetnews.com/karnataka-districts/hassan-delivery-boy-varun-murder-case-ganja-money-dispute-friends-arrested-san-videoshow-luzn4ng</link>
            <guid isPermaLink="true">https://kannada.asianetnews.com/karnataka-districts/hassan-delivery-boy-varun-murder-case-ganja-money-dispute-friends-arrested-san-videoshow-luzn4ng</guid>
            <pubDate>Thu, 26 Mar 2026 22:00:16 +0530</pubDate>
            <description><![CDATA[ಹಣ ಮತ್ತು ಗಾಂಜಾ ವಿಚಾರಕ್ಕಾಗಿ ಬೆಂಗಳೂರಿನ ಡೆಲಿವರಿ ಬಾಯ್ ವರುಣ್&zwnj;ನನ್ನು ಆತನ ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಟ್ಟುಹಾಕಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.]]></description>
            <media:content url="https://geo.dailymotion.com/player/x1tbu.html?video=xa3bitw" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ಹಾಸನ (ಮಾ.26): &lt;/strong&gt;ಗಾಂಜಾ ನಶೆ ಹಾಗೂ ಹಣದ ವಿಚಾರಕ್ಕಾಗಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವರುಣ್ ಎಂಬ ಯುವಕ ತನ್ನದೇ ಸ್ನೇಹಿತರಿಂದ ಹತ್ಯೆಯಾಗಿದ್ದಾನೆ. ತಿಂಗಳಿಗೊಮ್ಮೆ ತನ್ನೂರಿಗೆ ಹೋಗುತ್ತಿದ್ದ ವರುಣ್, ಕಳೆದ ಬಾರಿ ಹೋದಾಗ ನಾಪತ್ತೆಯಾಗಿದ್ದ.&amp;nbsp;&lt;strong&gt;ಸತ್ತಂತೆ ಕಥೆ ಕಟ್ಟಿದ್ದ ಹಾಸನದ ವಿವಾಹಿತೆ: ಪ್ರಿಯಕರ ಡೇವಿಡ್&zwnj;ಗೆ ಕೈ ಕೊಟ್ಟು ಗಂಡನ ಜೊತೆ ಹೋಗಲು ಒಪ್ಪಿದ ಪ್ರಿಯಾಂಕ!&lt;/strong&gt;&lt;/p&gt;&lt;p&gt;ಮೂರು ದಿನಗಳ ನಂತರ ನಿರ್ಜನ ಪ್ರದೇಶದಲ್ಲಿ ಆತನ ಸುಟ್ಟ ಮೃತದೇಹ ಪತ್ತೆಯಾಗಿತ್ತು. ಪೊಲೀಸರ ತನಿಖೆಯಲ್ಲಿ ಹಂತಕ ಸ್ನೇಹಿತರ ಅಸಲಿ ಮುಖವಾಡ ಕಳಚಿದೆ. ವರುಣ್&zwnj;ನ ಸ್ನೇಹಿತ ಶಶಾಂಕ್, ಬೆಂಗಳೂರಿನಿಂದ ಗಾಂಜಾ (ಮಾಲ್) ತರುವಂತೆ ವರುಣ್ ಅಕೌಂಟ್&zwnj;ಗೆ 7 ಸಾವಿರ ರೂಪಾಯಿ ಹಾಕಿದ್ದ. ಆದರೆ ವರುಣ್ ಗಾಂಜಾವನ್ನೂ ತರದೆ, ಹಣವನ್ನೂ ಮರಳಿಸದೆ ಸತಾಯಿಸುತ್ತಿದ್ದ ಎನ್ನಲಾಗಿದೆ.&lt;/p&gt;&lt;p&gt;ಇದರಿಂದ ಆಕ್ರೋಶಗೊಂಡ ಶಶಾಂಕ್ ಮತ್ತು ಗ್ಯಾಂಗ್, ವರುಣ್&zwnj;ನನ್ನು ಕಿಡ್ನ್ಯಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಬೆಂಕಿ ಹಚ್ಚಿದ್ದರು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನಶೆಯ ಹವ್ಯಾಸಕ್ಕೆ ಬಲಿಯಾದ ವರುಣ್ ಕುಟುಂಬ ಬೀದಿಗೆ ಬಿದ್ದಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>hassan</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/hassan-delivery-boy-varun-murder-case-ganja-money-dispute-friends-arrested-san-videoshow-luzn4ng"/>
        </item>
        <item>
            <title><![CDATA[ಶೇಖಿ ಅಣ್ಣನ ಅಂಗಡಿಗೆ ಬೀಗ; ಅಕ್ಷರಗಳ ಯುಗಕ್ಕೆ ತೆರೆ ಓದುಗರ ಮನದಲ್ಲಿ ಉಳಿದ ಅಯ್ನೋರ ನೆನಪು]]></title>
            <link>https://kannada.asianetnews.com/karnataka-districts/hassan-district-arasikete-shekhi-anna-shop-closed-the-end-of-a-chapter-in-reading-culture-and-journalism-heritage-mrq/articleshow-mkfgcaa</link>
            <guid isPermaLink="true">https://kannada.asianetnews.com/karnataka-districts/hassan-district-arasikete-shekhi-anna-shop-closed-the-end-of-a-chapter-in-reading-culture-and-journalism-heritage-mrq/articleshow-mkfgcaa</guid>
            <pubDate>Fri, 10 Apr 2026 18:34:55 +0530</pubDate>
            <description><![CDATA[&lt;p&gt;ನಾಲ್ಕು ದಶಕಗಳ ಕಾಲ ಅಕ್ಷರ ಸೇವೆ ಸಲ್ಲಿಸಿದ, ಓದುಗರ ಸಾಂಸ್ಕೃತಿಕ ಕೇಂದ್ರವಾಗಿದ್ದ 'ಅಯ್ನೋರು ಅಂಗಡಿ' (ಶೇಖಿ ಅಣ್ಣನ ಅಂಗಡಿ) ಇದೀಗ ಇತಿಹಾಸದ ಪುಟ ಸೇರಿದೆ. ಈ ಅಂಗಡಿಯ ಮುಚ್ಚುವಿಕೆಯು ನಗರದ ಓದು ಸಂಸ್ಕೃತಿ ಮತ್ತು ಪತ್ರಿಕಾ ಪರಂಪರೆಯ ಒಂದು ಅಧ್ಯಾಯದ ಅಂತ್ಯವನ್ನು ಸೂಚಿಸುತ್ತದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01knvqmrbgwcnevyrd2hvq97tc,imgname-arasikere-1775826002288.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ:&amp;nbsp;&lt;/strong&gt; ಅರಸೀಕೆರೆ ನಗರದ ಹೃದಯ ಭಾಗದಲ್ಲಿ ನಾಲ್ಕು ದಶಕಗಳ ಕಾಲ ಅಕ್ಷರಗಳ ಪರಿಮಳ ಹರಡುತ್ತಿದ್ದ, ಸಾವಿರಾರು ಓದುಗರ ಬೆಳಗಿನ ಅಭ್ಯಾಸಕ್ಕೆ ಜೀವ ತುಂಬುತ್ತಿದ್ದ, ಪತ್ರಿಕಾ ಲೋಕದ ಅನೇಕ ನೆನಪುಗಳನ್ನು ಹೊತ್ತಿದ್ದ &lsquo;ಅಯ್ನೋರು ಅಂಗಡಿ(ಶೇಖಿಅಣ್ಣನ ಅಂಗಡಿ)&rsquo; ಇದೀಗ ಇತಿಹಾಸದ ಪುಟ ಸೇರಿದೆ.&lt;/p&gt;&lt;p&gt;ದಿವಂಗತ ಮರುಳ ಸಿದ್ದಯ್ಯ ಅವರ ಮಾಲೀಕತ್ವದಲ್ಲಿ ಆರಂಭವಾಗಿ, ನಂತರ ಕುಟುಂಬದ ಸದಸ್ಯರ ಶ್ರಮದಿಂದ ಮುಂದುವರಿದ ಈ ಅಕ್ಷರ ಮನೆ ಇಂದು ಬಾಗಿಲು ಮುಚ್ಚಿರುವುದು ಕೇವಲ ಒಂದು ಅಂಗಡಿ ಮುಚ್ಚಿದ ಘಟನೆ ಮಾತ್ರವಲ್ಲ; ಅರಸೀಕೆರೆಯ ಓದು ಸಂಸ್ಕೃತಿ, ಪತ್ರಿಕಾ ಪರಂಪರೆ ಮತ್ತು ಮಾನವೀಯ ಸಂಬಂಧಗಳ ಒಂದು ಅಧ್ಯಾಯವೇ ಅಂತ್ಯ ಕಂಡಂತಾಗಿದೆ.&lt;/p&gt;&lt;h2&gt;&lt;strong&gt;ಅಕ್ಷರ ಭಂಡಾರ&lt;/strong&gt;&lt;/h2&gt;&lt;p&gt;ಒಂದು ಕಾಲದಲ್ಲಿ ಬೆಳಗಿನ ಜಾವವೇ ನಗರದ ನಾಡಿಯಂತೆ ಚುರುಕುಗೊಂಡು, ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ದಿನಪತ್ರಿಕೆಗಳು, ವಾರಪತ್ರಿಕೆಗಳು, ಸಂಚಿಕೆಗಳು, ಸಾಹಿತ್ಯ ಕೃತಿಗಳು ಮತ್ತು ಸುದ್ದಿಯ ಹೊಸಹೊಸ ಹರಿವುಗಳನ್ನು ಓದುಗರ ಕೈಗೆ ತಲುಪಿಸುತ್ತಿದ್ದ ಈ ಮಳಿಗೆ, ಅನೇಕ ಮಂದಿಗೆ &lsquo;ಅಂಗಡಿ&rsquo;ಗಿಂತ ಹೆಚ್ಚಾಗಿ &lsquo;ಅಕ್ಷರ ಭಂಡಾರ&rsquo;ವಾಗಿತ್ತು. ಪತ್ರಿಕೆ ಖರೀದಿಸಲು ಬಂದವರಿಗಷ್ಟೇ ಅಲ್ಲ, ಲೇಖಕರು, ವರದಿಗಾರರು, ಪತ್ರಿಕಾ ಪ್ರತಿನಿಧಿಗಳು, ಸಾಹಿತ್ಯಾಸಕ್ತರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ರಾಜಕೀಯ ಆಸಕ್ತರಿಗೂ ಇದು ಪ್ರತಿದಿನದ ತಂಗುದಾಣವಾಗಿತ್ತು.&lt;/p&gt;&lt;p&gt;ಸಾರ್ವಜನಿಕ ವಲಯದಲ್ಲಿ ಪ್ರೀತಿಯಿಂದ ಅಯ್ನೋರು ಎಂದೇ ಪರಿಚಿತರಾಗಿದ್ದ ದಿವಂಗತ ಮರುಳ ಸಿದ್ದಯ್ಯ ಅವರು, ಪತ್ರಿಕೆ ಮಾರಾಟವನ್ನು ಕೇವಲ ವೃತ್ತಿಯಾಗಿ ನೋಡಲಿಲ್ಲ. ಜನರಿಗೆ ಸುದ್ದಿ ತಲುಪಿಸುವ ಕೆಲಸವನ್ನು ಅವರು ಒಂದು ಸಾಮಾಜಿಕ ಜವಾಬ್ದಾರಿಯಂತೆ ನಿರ್ವಹಿಸಿದ್ದರು. ಬಳಿಕ ಪುತ್ರಿ ಟಿ.ಎಂ. ರೇಣುಕ ಅವರೊಂದಿಗೆ ಈ ಕಾರ್ಯವನ್ನು ಮುಂದುವರಿಸಿದ ಕುಟುಂಬ, ಕಳೆದ ಸುಮಾರು 25 ವರ್ಷಗಳಿಂದ ಕಿರಿಯ ಪುತ್ರ ಟಿ.ಎಂ. ಚಂದ್ರಶೇಖರ್ ಮತ್ತು ಸೊಸೆ ಟಿ.ಎಸ್. ಪ್ರತಿಭಾ ಅವರ ಕೈಯಲ್ಲಿ ಈ ಅಕ್ಷರ ಪರಂಪರೆಯನ್ನು ಜೀವಂತವಾಗಿಟ್ಟಿತ್ತು.&lt;/p&gt;&lt;p&gt;ಈ ಅಂಗಡಿಗೆ ಬಂದವರು ಕೇವಲ ಪತ್ರಿಕೆಗಳನ್ನು ಖರೀದಿಸಿ ತೆರಳುವುದಷ್ಟೇ ಆಗಿರಲಿಲ್ಲ. ಇಲ್ಲಿ ಪ್ರತಿದಿನ ಸುದ್ದಿಗಳ ವಿನಿಮಯ ನಡೆಯುತ್ತಿತ್ತು. ರಾಜ್ಯ ರಾಜಕೀಯದಿಂದ ಹಿಡಿದು ಸ್ಥಳೀಯ ಸಮಸ್ಯೆಗಳವರೆಗೆ, ರಾಷ್ಟ್ರದ ಬೆಳವಣಿಗೆಗಳಿಂದ ಹಿಡಿದು ಊರ ಜಾತ್ರೆಯವರೆಗೆ, ಒಂದು ಕಪ್ ಚಹಾ ಜೊತೆಗೆ ಚರ್ಚೆಗಳು ಹೊಮ್ಮುತ್ತಿದ್ದವು. ಅನೇಕ ಹಿರಿಯ ಪತ್ರಕರ್ತರು, ಸ್ಥಳೀಯ ವರದಿಗಾರರು ತಮ್ಮ ವೃತ್ತಿ ಜೀವನದ ಆರಂಭಿಕ ಹೆಜ್ಜೆಗಳನ್ನು ಇದೇ ಅಂಗಡಿಯ ಸುತ್ತಮುತ್ತ ಇಟ್ಟಿದ್ದರೆ, ಹಲವು ಸುದ್ದಿಗಳು ಇಲ್ಲಿ ಹುಟ್ಟಿ ನಂತರ ಪತ್ರಿಕೆಯ ಪುಟ ಸೇರಿದ್ದವು ಎಂಬುದು ಹಿರಿಯರ ನೆನಪು.&lt;/p&gt;&lt;h3&gt;&lt;strong&gt;ಸಾಮಾನ್ಯ ವ್ಯಾಪಾರ ಮಳಿಗೆ&lt;/strong&gt;&lt;/h3&gt;&lt;p&gt;ತಂತ್ರಜ್ಞಾನ ಇಷ್ಟಾಗಿ ಬೆಳೆದಿರದ ಕಾಲದಲ್ಲಿ, ಕೈಬರಹದ ಸುದ್ದಿಗಳನ್ನು ಕಳುಹಿಸುವ ವ್ಯವಸ್ಥೆ ಇದ್ದಾಗ, ಪತ್ರಿಕಾ ಪ್ರತಿನಿಧಿಗಳ ಅಡ್ಡೆಯಾಗಿಯೂ, ಮಾಹಿತಿ ವಿನಿಮಯ ಕೇಂದ್ರವಾಗಿಯೂ ಈ ಅಂಗಡಿ ಕೆಲಸ ಮಾಡಿತ್ತು. ಪತ್ರಿಕೆ ತಲುಪಿಸುವುದು, ಹೊಸ ಸಂಚಿಕೆಗಳನ್ನು ಪರಿಚಯಿಸುವುದು, ಸಾಹಿತ್ಯ ಪುಸ್ತಕಗಳನ್ನು ಶಿಫಾರಸು ಮಾಡುವುದು ಇವೆಲ್ಲವೂ ಇಲ್ಲಿ ನಿತ್ಯದ ಬದುಕಿನ ಭಾಗವಾಗಿದ್ದವು. ಅಕ್ಷರ ಜಗತ್ತಿನ ಮೇಲಿನ ನಿಷ್ಠೆ ಮತ್ತು ಓದುಗರೊಂದಿಗೆ ಬೆಸೆದ ಮಾನವೀಯ ಬಾಂಧವ್ಯವೇ ಈ ಅಂಗಡಿಯನ್ನು ಸಾಮಾನ್ಯ ವ್ಯಾಪಾರ ಮಳಿಗೆಯಿಂದ ವಿಶಿಷ್ಟ ಸ್ಥಾನಕ್ಕೆ ಎತ್ತಿತ್ತು.&lt;/p&gt;&lt;p&gt;ಪ್ರತಿ ದಿನ ಯಾವುದೇ ಜಂಜಾಟವಿದ್ದರೂ, ಮನೆಯಲ್ಲೇನಾದರೂ ಕಾರ್ಯಕ್ರಮವಿದ್ದರೂ, ಆರೋಗ್ಯದಲ್ಲಿ ಏನೇ ತೊಂದರೆ ಇದ್ದರೂ, ಅಥವಾ ಬೇರೆ ಯಾವುದೇ ಕಮಿಟ್ಮೆಂಟ್&zwnj;ಗಳಿದ್ದರೂ &ldquo;ಶೇಕಿ ಅಣ್ಣ&rdquo; ಮಾತ್ರ ಬೆಳಿಗ್ಗೆ 5 ಗಂಟೆಗೆ ಸರಿಯಾಗಿ ಅಂಗಡಿ ಬಾಗಿಲು ತೆರೆಯುತ್ತಿದ್ದರು.&lt;/p&gt;&lt;p&gt;ನಗರ ಇನ್ನೂ ನಿದ್ದೆಯಲ್ಲಿರುವ ಹೊತ್ತಿಗೆ, ರಸ್ತೆಗಳು ಮೌನದಲ್ಲಿರುವ ಹೊತ್ತಿಗೆ, ಪತ್ರಿಕೆಗಳ ಕಟ್ಟೆಗಳು ಬರುವ ಸಮಯಕ್ಕೆ ಕಾಯುತ್ತಾ, ದಿನದ ಆರಂಭವನ್ನು ಅಕ್ಷರಗಳೊಂದಿಗೆ ಶುರು ಮಾಡುತ್ತಿದ್ದ ಆ ಶಿಸ್ತಿನ ಬದುಕು ಈಗ ನೆನಪಾಗಿ ಉಳಿದಿದೆ.&lt;/p&gt;&lt;p&gt;ಬೆಳಗಿನ ಜಾವ ಪತ್ರಿಕೆಗಾಗಿ ಬರುವ ಓದುಗರಿಗೆ, ವಿತರಕರಿಗೆ, ಪತ್ರಿಕಾ ಪ್ರತಿನಿಧಿಗಳಿಗೆ &ldquo;ಅಂಗಡಿ ತೆರೆದಿದೆಯಾ?&rdquo; ಎಂಬ ಪ್ರಶ್ನೆಯೇ ಇರಲಿಲ್ಲ. ಏಕೆಂದರೆ ಅಂಗಡಿ ಎಂದರೆ ಶೇಕಿ ಅಣ್ಣ, ಶೇಕಿ ಅಣ್ಣ ಎಂದರೆ ಸಮಯಪಾಲನೆ ಎಂಬ ನಂಬಿಕೆ ಎಲ್ಲರ ಮನದಲ್ಲೂ ಗಟ್ಟಿಯಾಗಿ ನೆಲಸಿತ್ತು. ಮಳೆ ಬಂದರೂ, ಚಳಿ ಕಚ್ಚಿದರೂ, ಹಬ್ಬದ ದಿನವಾದರೂ, ನಗರದ ಬದುಕು ಶುರುವಾಗುವ ಮೊದಲು ಅಕ್ಷರಗಳ ಬದುಕನ್ನು ಶುರು ಮಾಡುತ್ತಿದ್ದ ಆ ವ್ಯಕ್ತಿತ್ವವೇ ಇಂದು ಜನರ ಕಣ್ಣಲ್ಲಿ ನೀರೂರಿಸುವ ನೆನಪಾಗಿದೆ.&lt;/p&gt;&lt;p&gt;ಇದೀಗ ಬಾಡಿಗೆ ಒಪ್ಪಂದದ ಅವಧಿ, ವಾಣಿಜ್ಯ ಸಂಕೀರ್ಣದ ಮಾಲಿಕತ್ವ ಬದಲಾವಣೆ ಮತ್ತು ಬದಲಾಗುತ್ತಿರುವ ಪರಿಸ್ಥಿತಿಗಳ ನಡುವಲ್ಲಿ ಈ ಅಂಗಡಿ ಮುಚ್ಚಬೇಕಾದ ಅನಿವಾರ್ಯತೆ ಎದುರಾದ ಹಿನ್ನೆಲೆ, ಅರಸೀಕೆರೆಯ ಅನೇಕ ಓದುಗರ ಮನದಲ್ಲಿ ಖಾಲಿತನ ಮೂಡಿದೆ. ಪ್ರತಿದಿನ ಬೆಳಿಗ್ಗೆ ಪತ್ರಿಕೆ ಹಿಡಿದು ದಿನವನ್ನು ಆರಂಭಿಸುತ್ತಿದ್ದ ಹಿರಿಯರು, ವಾರಪತ್ರಿಕೆಗಾಗಿ ಕಾಯುತ್ತಿದ್ದ ಓದುಗರು, ಪುಸ್ತಕ ಪ್ರಿಯರು ಮತ್ತು ಸುದ್ದಿಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಪತ್ರಿಕಾ ವಲಯದವರಿಗೆ ಇದು ಮನಕಲುಕುವ ಕ್ಷಣವಾಗಿದೆ.&lt;/p&gt;&lt;p&gt;&lsquo;ಶೇಖಿಅಣ್ಣನ ಅಂಗಡಿ&rsquo; ಇರದ ಅರಸೀಕೆರೆ ಇಂದು ಅನೇಕ ಮಂದಿಗೆ ಅಪೂರ್ಣವಾಗಿ ಕಾಣುತ್ತಿದೆ. ಅಕ್ಷರಗಳ ಗದ್ದಲ, ಪತ್ರಿಕೆ ಕಟ್ಟುವ ಸದ್ದು, ಸುದ್ದಿಯ ಚರ್ಚೆಗಳು, ಪರಿಚಿತ ಮುಖಗಳ ನಗು&mdash;ಇವೆಲ್ಲವೂ ಈಗ ನೆನಪುಗಳಾಗಿ ಉಳಿದಿವೆ. ಓದುಗರ ಮನದಲ್ಲಿ ಈ ಅಂಗಡಿ ಕೇವಲ ಮಾರಾಟ ಕೇಂದ್ರವಾಗಿರಲಿಲ್ಲ; ಅದು ಒಂದು ಬದುಕಿನ ಭಾಗ, ಒಂದು ಭಾವನಾತ್ಮಕ ಸಂಬಂಧ, ಒಂದು ಕಾಲಘಟ್ಟದ ಸಾಕ್ಷಿಯಾಗಿತ್ತು.&lt;/p&gt;&lt;p&gt;ಅರಸೀಕೆರೆಯ ಅನೇಕ ಪೀಳಿಗೆಗಳಿಗೆ ಅಕ್ಷರ ಪ್ರೀತಿ, ಓದು ಅಭ್ಯಾಸ ಮತ್ತು ಸುದ್ದಿ ಜಗತ್ತಿನ ನಂಟು ಬೆಳೆಸಿದ &lsquo;ಅಯ್ನೋರ ಅಂಗಡಿ&rsquo; ಈಗ ಬಾಗಿಲು ಮುಚ್ಚಿದರೂ, ಅದು ಮೂಡಿಸಿದ ನೆನಪುಗಳು ಮತ್ತು ಅಕ್ಷರಗಳ ಬೆಳಕು ನಗರದ ಮನಸ್ಸಿನಲ್ಲಿ ಇನ್ನೂ ದೀರ್ಘಕಾಲ ಉಳಿಯಲಿವೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;20 ವರ್ಷಗಳಿಂದ ಸ್ಥಗಿತಗೊಂಡಿದ್ದ ಸೇವೆಗೆ ಮರುಜೀವ; ಮೆಜೆಸ್ಟಿಕ್&zwnj;ಗೆ ಡೈರೆಕ್ಟ್ 4 ಬಸ್&lt;/strong&gt;&lt;/p&gt;&lt;p&gt;----&lt;/p&gt;&lt;p&gt;&lt;strong&gt;ಹೇಳಿಕೆ: ಬಾಲಕೃಷ್ಣ, ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ&lt;/strong&gt;&lt;/p&gt;&lt;p&gt;&ldquo;ದಿನಪತ್ರಿಕಾ ರಂಗದಲ್ಲಿ ಪೈಪೋಟಿ ಹೆಚ್ಚಾದ ಈ ದಿನಗಳಲ್ಲಿ &lsquo;ಶೇಖಿ ಅಣ್ಣನ ಅಂಗಡಿ&rsquo; ನಮಗೆ ಕೇವಲ ವಿತರಣೆ ಕೇಂದ್ರವಾಗಿರಲಿಲ್ಲ. ಅದು ಅಕ್ಷರಕ್ಷಃ ಆಶ್ರಯ ತಾಣವಾಗಿತ್ತು. ದಿನಪತ್ರಿಕೆಗಳನ್ನು ಕೊಟ್ಟು-ತೆಗೆದುಕೊಳ್ಳುವ ದೈನಂದಿನ ಚಟುವಟಿಕೆಗಳು ಇಲ್ಲದಂತಾಗಿರುವುದು ತುಂಬಾ ಬೇಸರದ ಸಂಗತಿ. ಈ ಅಂಗಡಿ ಮುಚ್ಚಿದ ನಂತರ ಅರಸೀಕೆರೆಯ ಪತ್ರಿಕಾ ವಲಯದಲ್ಲಿ ಒಂದು ಖಾಲಿತನ ಮೂಡಿದೆ,&rdquo;.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 425 ಉಪಗ್ರಾಮಗಳ ರಚನೆ! ಜನರಿಗೆ ಇದರಿಂದ ಏನು ಲಾಭ?&lt;/strong&gt;&lt;/p&gt;]]></content:encoded>
            <category>hassan</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/hassan-district-arasikete-shekhi-anna-shop-closed-the-end-of-a-chapter-in-reading-culture-and-journalism-heritage-mrq/articleshow-mkfgcaa"/>
        </item>
        <item>
            <title><![CDATA[Heartbreaking Incident in Hassan: ಸಾಲ ಮಾಡಿ ತಂದ ಮೇವಿನ ಬಣವೆಗೆ ಬೆಂಕಿ, ರೈತ ಕಣ್ಣೀರು]]></title>
            <link>https://kannada.asianetnews.com/karnataka-districts/heartbreaking-incident-in-hassan-farmer-loses-loan-funded-fodder-to-fire-rav/articleshow-prb9gv6</link>
            <guid isPermaLink="true">https://kannada.asianetnews.com/karnataka-districts/heartbreaking-incident-in-hassan-farmer-loses-loan-funded-fodder-to-fire-rav/articleshow-prb9gv6</guid>
            <pubDate>Tue, 17 Mar 2026 06:56:35 +0530</pubDate>
            <description><![CDATA[&lt;p&gt;ಹಾಸನ ತಾಲೂಕಿನ ವೇದಾವತಿ ಗ್ರಾಮದ ರೈತ ರಂಗಸ್ವಾಮಿ ಅವರು ಸಾಲ ಮಾಡಿ ಸಂಗ್ರಹಿಸಿದ್ದ 80 ಸಾವಿರಕ್ಕೂ ಹೆಚ್ಚು ಮೌಲ್ಯದ ಮೇವಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ದುರ್ಘಟನೆಯಿಂದ ಸಂಪೂರ್ಣ ಮೇವು ನಾಶವಾಗಿದ್ದು, ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ದನಕರುಗಳಿಗೆ ಮೇವು ಒದಗಿಸಲು ಪರದಾಟ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkwp4kmzaxespqs7af2e2429,imgname-1-1773710495391.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ (ಮಾ.17):&lt;/strong&gt; ರೈತನು ಸಾಲ ಮಾಡಿ ತಂದು ಸಂಗ್ರಹಿಸಿ ಇಡಲಾಗಿದ್ದ ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಆಹುತಿಯಾದ ಘಟನೆ ತಾಲೂಕಿನ ದುದ್ದ ಹೋಬಳಿ ವೇದಾವತಿ ಗ್ರಾಮದಲ್ಲಿ ಸಂಭವಿಸಿದೆ.&lt;/p&gt;&lt;p&gt;ವೇದಾವತಿ ಗ್ರಾಮದ ರೈತ ರಂಗಸ್ವಾಮಿಗೆ ಸೇರಿದ ಸುಮಾರು ಐದಾರು ಲೋಡ್&zwnj;ಗಿಂತ ಹೆಚ್ಚು ಮೇವಿನ ಸಂಗ್ರಹಣೆ ಮಾಡಲಾಗಿದ್ದ ಬಣವೆಗೆ ಬೆಂಕಿ ತಗುಲಿದ್ದು, ಅಂದಾಜು ೮೦ ಸಾವಿರಕ್ಕೂ ಹೆಚ್ಚಿನ ಬೆಲೆಬಾಳುವ ಗೋವುಗಳ ಮೇವು ಪೂರ್ಣ ಬೆಂಕಿಯಲ್ಲಿ ಬೆಂದು ಕರಕಲು ಆಗಿದೆ ಎಂದು ತಿಳಿದು ಬಂದಿದೆ.&amp;nbsp;&lt;/p&gt;&lt;p&gt;ಬೆಂಕಿಯ ಜ್ವಾಲೆ ತೀವ್ರವಾಗಿದ್ದರಿಂದ ಕೆಲವೇ ಕ್ಷಣಗಳಲ್ಲಿ ಮೇವಿನ ಬಣವೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ದುರ್ಘಟನೆಯ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಹಾಸನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿಯ ತೀವ್ರತೆಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿದರು.&amp;nbsp;&lt;/p&gt;&lt;p&gt;ಗ್ರಾಮಸ್ಥರು ಕೂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿಗೆ ಸಹಕಾರ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡರು. ಇದೇ ವೇಳೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್&zwnj;ನ ರೋವರ್&zwnj; ನಾರಾಯಣಗೌಡ ಅವರು ಸಹ ನೆರವು ನೀಡಿದರು.&lt;/p&gt;&lt;p&gt;ಇದೇ ವೇಳೆ ರೈತ ರಂಗಸ್ವಾಮಿ ಮಾಧ್ಯಮದೊಂದಿಗೆ ಮಾತನಾಡಿ, ತಮ್ಮ ದನಕರುಗಳಿಗೆ ಮೇವು ಒದಗಿಸುವ ಉದ್ದೇಶದಿಂದ ಸಾಲ ಮಾಡಿಕೊಂಡು ಮೇವು ಖರೀದಿಸಿ ಸಂಗ್ರಹಿಸಿ ಇಡಲಾಗಿತ್ತು. ಆದರೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಮೇವು ನಾಶವಾಗಿದ್ದು, ಇದೀಗ ದನಕರುಗಳಿಗೆ ಮೇವು ಒದಗಿಸುವುದೇ ಕಷ್ಟಕರವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.&amp;nbsp;&lt;/p&gt;&lt;p&gt;ಈ ಅಗ್ನಿ ಅವಘಡದಿಂದ ರೈತನಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತನಿಗೆ ಜಿಲ್ಲಾಡಳಿತ ಹಾಗೂ ಸಂಬಂಧಿತ ಇಲಾಖೆಗಳು ತಕ್ಷಣ ಪರಿಹಾರ ಮತ್ತು ನೆರವು ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>hassan</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/heartbreaking-incident-in-hassan-farmer-loses-loan-funded-fodder-to-fire-rav/articleshow-prb9gv6"/>
        </item>
        <item>
            <title><![CDATA[ನುಗ್ಗೇಹಳ್ಳಿಯಲ್ಲಿ ವರ್ಷದ ಉತ್ತಮ ಮಳೆಗಾಗಿ ತಿಂಗಳ ಮಾಮನ ತೇರು ಹಬ್ಬ; ಮದುವೆ ಮಾಡಿ ಆಚರಣೆ]]></title>
            <link>https://kannada.asianetnews.com/karnataka-districts/channarayapatna-tingala-mama-teru-festival-in-nuggehalli-for-good-rains-of-the-year-mrq/articleshow-twroytm</link>
            <guid isPermaLink="true">https://kannada.asianetnews.com/karnataka-districts/channarayapatna-tingala-mama-teru-festival-in-nuggehalli-for-good-rains-of-the-year-mrq/articleshow-twroytm</guid>
            <pubDate>Mon, 06 Apr 2026 08:41:49 +0530</pubDate>
            <description><![CDATA[ಹಾಸನದ ನುಗ್ಗೇಹಳ್ಳಿಯಲ್ಲಿ ಮಳೆಗಾಗಿ 'ತಿಂಗಳಮಾಮನ ತೇರು' ಎಂಬ ವಿಶಿಷ್ಟ ಹಬ್ಬವನ್ನು ಆಚರಿಸಿದರೆ, ಸಕಲೇಶಪುರದಲ್ಲಿ 16 ಅಡಿ ಎತ್ತರದ ಏಕಶಿಲಾ ಆಂಜನೇಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಇದರೊಂದಿಗೆ, ಮದ್ದೂರಿನಲ್ಲಿ ಸಾಯಿಬಾಬಾರ 21ನೇ ವರ್ಷದ ಪಲ್ಲಕ್ಕಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kngc7yg8ts70sy5kh1fzna35,imgname-channarayapatna-1775444949512.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ: &lt;/strong&gt;ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿಯಲ್ಲಿ ತಿಂಗಳ ಮಾಮನ ತೇರು ಹಬ್ಬವನ್ನು 9 ದಿನಗಳ ಕಾಲ ಅದ್ಧೂರಿಯಾಗಿ ಆಚರಿಸುವ ಪದ್ಧತಿ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ.&lt;/p&gt;&lt;p&gt;ಕಾರ್ಯಕ್ರಮವನ್ನು ಮಾಡುವ ಉದ್ದೇಶವೇನೆಂದರೆ ಮಳೆಗಾಗಿ ಮಾಡುವಂತ ಹಬ್ಬ, ಈ ಹಬ್ಬವನ್ನು ಗ್ರಾಮದ ಮಹಿಳೆಯರು ಪುರುಷರು ಸೇರಿ ಮಾಡುವಂತಹ ಹಬ್ಬವಾಗಿದ್ದು ಹಬ್ಬದಲ್ಲಿ ಮೊದಲನೇ ದಿನ ತಿಂಗಳ ಮಾವನ ತೇರನ್ನು ಬಿಡಿಸಿ ಆಂಜನೇಯನ ಪ್ರತಿಮೆಯನ್ನು ರಂಗೋಲಿಯಲ್ಲಿ ಬಿಡಿಸಿ ಪ್ರತಿದಿನ ಪೂಜೆ ಮಾಡಿ ಒಂದು ರೊಟ್ಟಿಯಿಂದ ಒಂಬತ್ತು ರೊಟ್ಟಿವರೆಗೆ ಇಟ್ಟು ಪೂಜಿಸಲಾಗುವುದು. ವಿಶೇಷವೇನೆಂದರೆ ಪೂಜೆ ಮುಗಿದ ನಂತರ ಒಂದು ರೊಟ್ಟಿಗೆ ಪೂಜೆ ಮಾಡಿ ಪೂಜೆ ಮುಗಿದ ನಂತರ ರೊಟ್ಟಿಯನ್ನು ಇಟ್ಟಿ ಕದ್ದಂಥವರಿಗೆ ನೀರನ್ನು ಎರಚುವ ಪದ್ಧತಿ. ಅಂದರೆ ಕೊನೆ ದಿನ ಒಂಬತ್ತು ರೊಟ್ಟಿಯನ್ನು ಇಟ್ಟು ಪೂಜಿಸಿ ಸೋಬಾನೆ ಪದ ಹಾಡಿ ಹೆಣ್ಣು-ಗಂಡಿಗೆ ಮದುವೆ ಮಾಡಿ ಆಚರಣೆ ಮಾಡಲಾಗುವುದು. ಈ ಕೊನೆ ದಿನ ಗ್ರಾಮಸ್ಥರೆಲ್ಲ ಸೇರಿ ಸಂತೋಷದಿಂದ ಆಚರಣೆ ಮಾಡಲಾಗುವುದು. ಈ ಆಚರಣೆಯ ಉದ್ದೇಶ ಮಳೆರಾಯನನ್ನು ಒಲಿಸುವುದು.&lt;/p&gt;&lt;p&gt;ಗ್ರಾಮದ ಮಹಿಳೆಯರಾದ ಸಣ್ಣಮ್ಮ, ಗೌರಮ್ಮ, ಪೂರ್ಣಿಮಾ, ಸುಜಾತ, ಮಂಜಮ್ಮ ಎಲ್ಲರೂ ಈ ಕಾರ್ಯಕ್ರಮದಲ್ಲಿ ಪ್ರತಿದಿನ ಭಾಗವಹಿಸಿ ಸೋಬಾನೆ ಪದ ಹಾಡಿ ರಂಜಿಸಿದರು. ಸೋಮನಾಥ್, ಕಲಾನಾಥ್, ಗೋಪಿನಾಥ್, ನಾಗೇಶ್ ಅವರು ಗ್ರಾಮದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಂದಂತ ಸಾರ್ವಜನಿಕರಿಗೆ ಕೊನೆಯ ದಿನ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.&lt;/p&gt;&lt;h2&gt;&lt;strong&gt;ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ&lt;/strong&gt;&lt;/h2&gt;&lt;p&gt;ಸಕಲೇಶಪುರ ತಾಲೂಕಿನ ಕರಗೂರು ಕೂಡಿಗೆ ಪಾಲಹಳ್ಳಿಯಲ್ಲಿ ಶ್ರೀ ಆಂಜನೇಯ ಸ್ವಾವಿ 16 ಅಡಿ ಎತ್ತರದ ಕಲ್ಲಿನ ಏಕಶಿಲಾ ನೂತನ ವಿಗ್ರಹದ ಪ್ರತಿಷ್ಠಾಪನೆ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ಧೂರಿಯಾಗಿ ನಡೆಯಿತು.&lt;/p&gt;&lt;p&gt;ಕಾರ್ಯಕ್ರಮಕ್ಕೆ ಹಾಸನ ಹಾಗೂ ಕೊಡಗು ಜಿಲ್ಲೆಯ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಆಂಜನೇಯ ಸ್ವಾಮಿ ಸೇವೆಯ ಪ್ರತೀಕವಾಗಿದ್ದು, ಎಲ್ಲಾ ಯುಗಗಳಲ್ಲೂ ಭಕ್ತರ ಪಾಲಿಗೆ ಶಕ್ತಿಯ ಮೂಲವಾಗಿದ್ದಾರೆ. ಭಕ್ತರು ನಿರಂತರ ರಾಮನಾಮ ಜಪ ಮಾಡಬೇಕು ಎಂದು ಹೇಳಿದರು. ತುಳಸಿ ಪೂಜೆ, ಗೋ ಪೂಜೆ ಮಾಡುವ ಮನೆಗಳು ಪವಿತ್ರವಾಗುತ್ತವೆ ಎಂದೂ ಅವರು ತಿಳಿಸಿದರು. ಆಂಜನೇಯನು ಬ್ರಹ್ಮಚಾರಿ, ಜಾಗೃತಿಯ ಪ್ರತೀಕವಾಗಿದ್ದು, ಯುವಜನತೆಗೆ ಆದರ್ಶ ಎಂದರು.&lt;/p&gt;&lt;p&gt;ಹೆಗ್ಗಡಹಳ್ಳಿ ಮಠದ ಶ್ರೀ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕಳೆದ ಮೂರು ದಿನಗಳಿಂದ ಯಜ್ಞ, ಹೋಮ-ಹವನ ಸೇರಿದಂತೆ ಸನಾತನ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಗ್ರಹ ಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಈ ವಿಗ್ರಹದ ಮುಂದೆ ಕೆಲ ಕ್ಷಣ ಪ್ರಾರ್ಥನೆ ಮಾಡಿದರೂ ಆತ್ಮಶಕ್ತಿ ಹೆಚ್ಚುತ್ತದೆ. ಕರಗೂರಿನ ಇತಿಹಾಸದಲ್ಲಿ ಇದು ಸುವರ್ಣ ಕ್ಷಣವಾಗಿದ್ದು, ಗ್ರಾಮಸ್ಥರಿಗೆ ಆರೋಗ್ಯ ಹಾಗೂ ಆಯುಷ್ಯ ಲಭಿಸಲಿ ಎಂದು ಆಶಿಸಿದರು.&lt;/p&gt;&lt;h3&gt;&lt;strong&gt;ಸಾಯಿಬಾಬಾರ 21ನೇ ವರ್ಷದ ಪಲ್ಲಕ್ಕಿ ಮಹೋತ್ಸವ&lt;/strong&gt;&lt;/h3&gt;&lt;p&gt;ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ಶ್ರೀ ಸಮರ್ಥ ಸದ್ಗುರು ಸಾಯಿಬಾಬಾರ 21ನೇ ವರ್ಷದ ಪಲ್ಲಕ್ಕಿ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಶನಿವಾರ ಬೆಳಗ್ಗೆಯಿಂದಲೇ ಬಾಬಾರಿಗೆ ಹೋಮ ಹವನ ಪೂಜಾ ವಿಧಿ ವಿಧಾನಗಳು ಜರುಗಿದವು. ಸಾಯಂಕಾಲ ಬಾಬಾರ ಪಲ್ಲಕ್ಕಿ ಉತ್ಸವ ಮಂಗಳವಾದ್ಯ ತಮಟೆ ನಗಾರಿಗಳ ಝೇಂಕಾರಗಳು ಮೊಳಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿ ಮನೆಯಲ್ಲೂ ಪೂಜೆ ಸಲ್ಲಿಸಿ ಬಾಬಾರವರ ದಿವ್ಯ ದರ್ಶನ ಪಡೆದು ಪುನೀತರಾದರು.&lt;/p&gt;&lt;p&gt;ಗ್ರಾಮದ ಪ್ರಮುಖ ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದ್ದವು. ಭಾನುವಾರ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಜರುಗಿತು. ಸಂಜೆ ಗೋವಿನ ಪೂಜೆ ಮಹಾ ಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ನಡೆಯಿತು.&lt;/p&gt;&lt;p&gt;&lt;img&gt;&lt;/p&gt;&lt;p&gt;ಕಲಾವಿದ ಗೌತಮ್ ವಳಗೆರೆಹಳ್ಳಿ ತಂಡದವರಿಂದ ಭಕ್ತಿ ಗೀತೆಗಳ ಗೀತ ಗಾಯನ ಕಾರ್ಯಕ್ರಮ ಮನಸೂರೆಗೊಂಡಿತು. ಪೂಜಾ ವಿಧಿ ವಿಧಾನಗಳನ್ನು ಬಾಬಾಸೇವಕ ಮುನಿ ಶಂಕರಯ್ಯ ನೆರವೇರಿಸಿದರು. ವಳಗೆರೆಹಳ್ಳಿ ಸೊಳ್ಳೆಪುರ ಸುತ್ತಮುತ್ತಲ ಗ್ರಾಮಸ್ಥರು ಆಗಮಿಸಿ ಬಾಬಾರವರ ದಿವ್ಯ ದರ್ಶನ ಪಡೆದರು.&lt;/p&gt;]]></content:encoded>
            <category>hassan</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/channarayapatna-tingala-mama-teru-festival-in-nuggehalli-for-good-rains-of-the-year-mrq/articleshow-twroytm"/>
        </item>
        <item>
            <title><![CDATA[ಹೊಳೆನರಸೀಪುರ ದೇಗುಲದ ರಥದ ಬಟ್ಟೆ ವಿಚಾರಕ್ಕೆ ಕಿತ್ತಾಡಿಕೊಂಡ  ರೇವಣ್ಣ-ಶ್ರೇಯಸ್ ಪಟೇಲ್, ಬರೇ ಹೂವಿನ ಅಲಂಕಾರದಲ್ಲೇ  ಸಂಪನ್ನಗೊಂಡ ರಥೋತ್ಸವ]]></title>
            <link>https://kannada.asianetnews.com/karnataka-districts/hassan-rathotsava-held-peacefully-amid-political-row-over-chariot-cloth-in-holenarasipura-gdp/articleshow-wgmp7ak</link>
            <guid isPermaLink="true">https://kannada.asianetnews.com/karnataka-districts/hassan-rathotsava-held-peacefully-amid-political-row-over-chariot-cloth-in-holenarasipura-gdp/articleshow-wgmp7ak</guid>
            <pubDate>Tue, 03 Mar 2026 14:12:24 +0530</pubDate>
            <description><![CDATA[&lt;p&gt;ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವದಲ್ಲಿ ರಥದ ಬಟ್ಟೆಯ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು. ಜಿಲ್ಲಾಡಳಿತದ ಮಧ್ಯಪ್ರವೇಶದಿಂದ, ಯಾವುದೇ ಬಟ್ಟೆ ಬಳಸದೆ ರಥವನ್ನು ಸಂಪೂರ್ಣವಾಗಿ ಹೂವುಗಳಿಂದ ಅಲಂಕರಿಸಿ ಉತ್ಸವವನ್ನು ಶಾಂತಿಯುತವಾಗಿ ನಡೆಸಲಾಯಿತು. &amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjsdkcr6rfzfmxe782qvwsnq,imgname-shreyas-patel-vs-h-d-revanna--1--1772527137542.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾಸನ: &lt;/strong&gt;ರಾಜಕೀಯ ಜಟಾಪಟಿಗೆ ಕಾರಣವಾಗಿದ್ದ ರಥದ ಬಟ್ಟೆ ವಿವಾದದ ನಡುವೆಯೇ ಹೊಳೆನರಸೀಪುರದಲ್ಲಿ ನಡೆದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವ ಶಾಂತಿಯುತವಾಗಿ ಹಾಗೂ ಭಕ್ತಿಪೂರ್ವಕವಾಗಿ ನೆರವೇರಿತು. ಬಹು ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ರಥದ ಅಲಂಕಾರ ವಿಚಾರಕ್ಕೆ ಅಂತಿಮವಾಗಿ ಜಿಲ್ಲಾಡಳಿತ ತೆರೆ ಎಳೆದಿದ್ದು, ಈ ಬಾರಿ ರಥವನ್ನು ಯಾವುದೇ ಬಟ್ಟೆ ಬಳಸದೆಯೇ ಸಂಪೂರ್ಣ ಹೂವಿನ ಅಲಂಕಾರದಿಂದ ಸಿಂಗಾರಿಸಿ ರಥೋತ್ಸವವನ್ನು ನಡೆಸಲಾಯಿತು.&lt;/p&gt;&lt;h2&gt;ರಾಜಕೀಯ ಸಂಘರ್ಷಕ್ಕೆ ಕಾರಣವಾದ ರಥದ ಬಟ್ಟೆ&lt;/h2&gt;&lt;p&gt;ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯ ಹೊಳೆನರಸೀಪುರದಲ್ಲಿ ನಡೆಯುವ ವಾರ್ಷಿಕ ರಥೋತ್ಸವಕ್ಕೆ ಸಂಬಂಧಿಸಿದಂತೆ ಈ ಬಾರಿ ರಥದ ಬಟ್ಟೆ ವಿಚಾರ ರಾಜಕೀಯ ಬಣ್ಣ ಪಡೆದುಕೊಂಡಿತ್ತು. ಹೊಸ ಬಟ್ಟೆ ಹೊದಿಸಬೇಕೇ ಅಥವಾ ಹಳೆಯ ಬಟ್ಟೆಯನ್ನೇ ಬಳಸಬೇಕೇ ಎಂಬ ಪ್ರಶ್ನೆ ಇಬ್ಬರು ರಾಜಕೀಯ ನಾಯಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.&lt;/p&gt;&lt;p&gt;ಹೊಸ ಬಟ್ಟೆ ಹೊದಿಸಲು ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಒತ್ತಾಯಿಸಿದ್ದರು. ಅವರು ಸುಮಾರು ಎರಡು ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ರಥದ ಬಟ್ಟೆಯನ್ನು ಹೊಲೆಸಿಸಿದ್ದರು ಎಂಬ ಮಾಹಿತಿ ಲಭ್ಯವಾಯಿತು. ಆದರೆ, ಒಬ್ಬರಿಂದ ಮಾತ್ರ ಹಣ ಪಡೆದು ಬಟ್ಟೆ ಹೊಲೆಯಲಾಗಿದೆ ಎಂಬ ಆಕ್ಷೇಪದೊಂದಿಗೆ ಜೆಡಿಎಸ್ ನಾಯಕ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರೋಧ ವ್ಯಕ್ತಪಡಿಸಿದರು. ಹೊಸ ಬಟ್ಟೆ ಹಾಕಬಾರದು ಎಂದು ಅವರು ಪಟ್ಟು ಹಿಡಿದಿದ್ದರು.&lt;/p&gt;&lt;h2&gt;ಜಿಲ್ಲಾಡಳಿತದ ಹಸ್ತಕ್ಷೇಪ&lt;/h2&gt;&lt;p&gt;ವಿವಾದ ತೀವ್ರಗೊಳ್ಳುತ್ತಿದ್ದಂತೆ ಜಿಲ್ಲಾಡಳಿತ ಮಧ್ಯಪ್ರವೇಶಿಸಿತು. ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ರಥದ ಹಳೆಯ ಬಟ್ಟೆಯನ್ನು ತೆರವುಗೊಳಿಸಲಾಯಿತು ಎಂದು ತಿಳಿದುಬಂದಿತು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, &ldquo;ಶಾಸಕನನ್ನೇ ಕಡೆಗಣಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ&rdquo; ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದಾಗ್ಯೂ, &ldquo;ನನ್ನ ಹಕ್ಕಿಗೆ ಚ್ಯುತಿ ಬಂದರೂ ಪರವಾಗಿಲ್ಲ, ರಥೋತ್ಸವ ಸುಸೂತ್ರವಾಗಿ ನಡೆಯಬೇಕು&rdquo; ಎಂದು ಅವರು ನಂತರ ಹೇಳಿದ್ದಾರೆ.&lt;/p&gt;&lt;h2&gt;ಹೂವಿನ ಅಲಂಕಾರದಲ್ಲೇ ರಥೋತ್ಸವ&lt;/h2&gt;&lt;p&gt;ರಾಜಕೀಯ ಜಟಾಪಟಿ ನಡುವೆಯೇ ಯಾವುದೇ ಬಟ್ಟೆ ಬಳಸದೆ, ಇಡೀ ರಥವನ್ನು ಹೂವಿನಿಂದಲೇ ಅಲಂಕರಿಸುವ ನಿರ್ಧಾರ ಕೈಗೊಳ್ಳಲಾಯಿತು. ಹೊಸ ಬಟ್ಟೆಯೂ ಇಲ್ಲ, ಹಳೆಯ ಬಟ್ಟೆಯೂ ಇಲ್ಲ&mdash;ಹೂವಿನ ಸಿಂಗಾರವೇ ಈ ಬಾರಿ ರಥದ ವೈಶಿಷ್ಟ್ಯವಾಗಿತ್ತು. ರಥೋತ್ಸವದ ದಿನ ಭಕ್ತರ ಹರ್ಷೋದ್ಗಾರಗಳ ನಡುವೆ ಮಹಾರಥವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.&lt;/p&gt;&lt;h2&gt;ಶಾಂತಿಯುತವಾಗಿ ಜರುಗಿದ ಉತ್ಸವ&lt;/h2&gt;&lt;p&gt;ವಿವಾದದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ರಥೋತ್ಸವ ಶಾಂತಿಯುತವಾಗಿ ನೆರವೇರಿತು.&lt;/p&gt;&lt;p&gt;ವಿವಾದಗಳ ನಡುವೆಯೂ ಸಾವಿರಾರು ಭಕ್ತರು ಭಕ್ತಿಭಾವದಿಂದ ಪಾಲ್ಗೊಂಡು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಗೆ ಹರಕೆ ತೀರಿಸಿದರು. ರಾಜಕೀಯ ಸಂಘರ್ಷದಿಂದ ಆರಂಭವಾದ ಈ ಘಟನೆ, ಅಂತಿಮವಾಗಿ ಭಕ್ತಿಪೂರ್ವಕವಾಗಿ ಹಾಗೂ ಶಾಂತಿಯುತವಾಗಿ ಸಂಪನ್ನಗೊಂಡ ರಥೋತ್ಸವದೊಂದಿಗೆ ಮುಕ್ತಾಯಗೊಂಡಿತು.&lt;/p&gt;&lt;p&gt;ಒಟ್ಟಿನಲ್ಲಿ, ಶ್ರೇಯಸ್ ಪಟೇಲ್ ಮತ್ತು ಹೆಚ್.ಡಿ. ರೇವಣ್ಣ ನಡುವಿನ ಪ್ರತಿಷ್ಠೆಯ ಕಣವಾಗಿದ್ದ ರಥದ ಬಟ್ಟೆ ವಿವಾದಕ್ಕೆ ಜಿಲ್ಲಾಡಳಿತ ಮಧ್ಯಸ್ಥಿಕೆಯಿಂದ ತೆರೆ ಬಿದ್ದಿದ್ದು, ಭಕ್ತರ ಭಾಗವಹಿಸುವಿಕೆಯಿಂದ ಉತ್ಸವ ಯಶಸ್ವಿಯಾಗಿ ಮುಕ್ತಾಯಗೊಂಡಿತು.&lt;/p&gt;]]></content:encoded>
            <category>hassan</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/hassan-rathotsava-held-peacefully-amid-political-row-over-chariot-cloth-in-holenarasipura-gdp/articleshow-wgmp7ak"/>
        </item>
        <item>
            <title><![CDATA[ಹಾಸನ, ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ದಿಢೀರ್ ಬದಲಾವಣೆ!  ಹಲವು ರೈಲುಗಳು ರದ್ದು!]]></title>
            <link>https://kannada.asianetnews.com/state/train-services-cancelled-on-march-16-due-to-underpass-construction-between-hassan-and-mavinakere-stations-gdp/articleshow-yw7h845</link>
            <guid isPermaLink="true">https://kannada.asianetnews.com/state/train-services-cancelled-on-march-16-due-to-underpass-construction-between-hassan-and-mavinakere-stations-gdp/articleshow-yw7h845</guid>
            <pubDate>Mon, 09 Mar 2026 22:15:32 +0530</pubDate>
            <description><![CDATA[ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಕೆಳಸೇತುವೆ ನಿರ್ಮಾಣ ಕಾಮಗಾರಿಯಿಂದಾಗಿ, ದಕ್ಷಿಣ ಪಶ್ಚಿಮ ರೈಲ್ವೆಯು ಮಾರ್ಚ್ 16 ರಂದು ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್&zwnj;ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳು ಅಂದು ಸಂಚರಿಸುವುದಿಲ್ಲ.]]></description>
            <media:content url="https://static.asianetnews.com/images/w-1280,h-720,format-jpg,imgid-01kd6243fcjxrv96wmk1ggke23,imgname-image-5a758be4-76e8-4466-b9d6-05a95d17bb18-1766508858860.jpg" type="image/jpeg" height="390" width="690"/>
            <content:encoded><![CDATA[&lt;p&gt;ದಕ್ಷಿಣ ಪಶ್ಚಿಮ ರೈಲ್ವೆಯ ವತಿಯಿಂದ ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವಿನ ಭಾಗದಲ್ಲಿ ಕೆಳಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ಕಾಮಗಾರಿಯನ್ನು ಸುರಕ್ಷಿತವಾಗಿ ಮತ್ತು ವೇಗವಾಗಿ ಪೂರ್ಣಗೊಳಿಸಲು ಕೆಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.&lt;/p&gt;&lt;p&gt;ಕಾಮಗಾರಿಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಾರ್ಚ್ 16ರಂದು ಕೆಲವು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ದಿನ ಪ್ರಯಾಣ ಮಾಡಲು ಯೋಜಿಸಿದ್ದ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಂಡುಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.&lt;/p&gt;&lt;h2&gt;ಮಾರ್ಚ್ 16ರಂದು ರದ್ದುಪಡಿಸಲಾದ ರೈಲು&lt;/h2&gt;&lt;p&gt;ಮಾರ್ಚ್ 16ರಂದು ರದ್ದುಪಡಿಸಲಾದ ರೈಲುಗಳಲ್ಲಿ ರೈಲು ಸಂಖ್ಯೆ 56267 ಅರಸೀಕೆರೆ&ndash;ಮೈಸೂರು ಪ್ಯಾಸೆಂಜರ್ ರೈಲು ಪ್ರಮುಖವಾಗಿದೆ. ಈ ರೈಲು ಸಾಮಾನ್ಯವಾಗಿ ದಿನನಿತ್ಯ ಪ್ರಯಾಣಿಕರಿಗೆ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದ್ದು, ಅದರ ಸಂಚಾರ ಆ ದಿನ ನಡೆಯುವುದಿಲ್ಲ.&lt;/p&gt;&lt;p&gt;ಅದೇ ರೀತಿ ರೈಲು ಸಂಖ್ಯೆ 16206 ಮೈಸೂರು&ndash;ತಾಳಗುಪ್ಪ ಎಕ್ಸ್&zwnj;ಪ್ರೆಸ್ ರೈಲು ಕೂಡ ಮಾರ್ಚ್ 16ರಂದು ಸಂಚರಿಸುವುದಿಲ್ಲ. ಈ ರೈಲು ಮೈಸೂರು ಹಾಗೂ ತಾಳಗುಪ್ಪ ನಡುವಿನ ಪ್ರಯಾಣಿಕರಿಗೆ ಮಹತ್ವದ ಸಂಪರ್ಕ ಕಲ್ಪಿಸುವ ಸೇವೆಯಾಗಿದೆ.&lt;/p&gt;&lt;p&gt;ಇದರ ಜೊತೆಗೆ ರೈಲು ಸಂಖ್ಯೆ 16205 ತಾಳಗುಪ್ಪ&ndash;ಮೈಸೂರು ಎಕ್ಸ್&zwnj;ಪ್ರೆಸ್ ರೈಲು ಸಂಚಾರವೂ ಆ ದಿನ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.&lt;/p&gt;&lt;h2&gt;ಈ ಕಾಮಗಾರಿ ಪೂರ್ಣಗೊಂಡ ನಂತರ ರೈಲು ಸಂಚಾರ ಮತ್ತಷ್ಟು ಸುಗಮ&lt;/h2&gt;&lt;p&gt;ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ನಡೆಯುತ್ತಿರುವ ಕೆಳಸೇತುವೆ ನಿರ್ಮಾಣ ಕಾಮಗಾರಿ ರೈಲು ಮಾರ್ಗದ ಸುರಕ್ಷತೆ ಹಾಗೂ ಭವಿಷ್ಯದ ಸಂಚಾರ ಸುಗಮತೆಗೆ ಅಗತ್ಯವಾಗಿದೆ. ಈ ಕಾಮಗಾರಿ ಪೂರ್ಣಗೊಂಡ ನಂತರ ರೈಲು ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.&lt;/p&gt;&lt;p&gt;ಆದ್ದರಿಂದ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆ ಮಾಡುವ ಮುನ್ನ ರೈಲುಗಳ ವೇಳಾಪಟ್ಟಿ ಮತ್ತು ಸಂಚಾರ ಸ್ಥಿತಿಯನ್ನು ಪರಿಶೀಲಿಸಿ ಬಳಿಕವೇ ಟಿಕೆಟ್&zwnj;ಗಳನ್ನು ಬುಕ್ ಮಾಡಿಕೊಳ್ಳುವುದು ಉತ್ತಮ ಎಂದು ರೈಲ್ವೆ ಇಲಾಖೆ ಸಲಹೆ ನೀಡಿದೆ.&lt;/p&gt;]]></content:encoded>
            <category>hassan</category>
            <dc:creator>Gowthami K</dc:creator>
            <atom:link href="https://kannada.asianetnews.com/state/train-services-cancelled-on-march-16-due-to-underpass-construction-between-hassan-and-mavinakere-stations-gdp/articleshow-yw7h845"/>
        </item>
        <item>
            <title><![CDATA[ಹಾಸನ: ರಾಯರ ದರ್ಶನಕ್ಕೂ ಮುನ್ನವೇ ಮಸಣ ಸೇರಿದ 8 ಮಂದಿ ಸಂಬಂಧಿಕರು, ಸಾವನ್ನಪ್ಪಿದ ಒಂದೊಂದು ಕುಟುಂಬದ್ದು ಒಂದೊಂದು ಕಥೆ!]]></title>
            <link>https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i</link>
            <guid isPermaLink="true">https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i</guid>
            <pubDate>Thu, 16 Apr 2026 16:52:43 +0530</pubDate>
            <description><![CDATA[ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ರಾಯರ ದರ್ಶನಕ್ಕೆ ತೆರಳುತ್ತಿದ್ದ ಹಾಸನ ಮತ್ತು ಚಿಕ್ಕಮಗಳೂರು ಮೂಲದ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಗೂಡ್ಸ್ ವಾಹನ ಮತ್ತು ಟ್ಯಾಂಕರ್ ನಡುವಿನ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಾಯಗೊಂಡಿದ್ದು, ಈ ದುರ್ಘಟನೆ ಗ್ರಾಮಗಳಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpb0b1kczs7ryf7d827z9qb8,imgname-mantralaya-road-accident-1776338437740.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು/ಹಾಸನ: &lt;/strong&gt;ಮಂತ್ರಾಲಯದ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ಕುಟುಂಬಗಳನ್ನೇ ನಡುಗಿಸಿದೆ. ರಾಯರ ದರ್ಶನಕ್ಕಾಗಿ ಹೊರಟಿದ್ದ ಒಂದೇ ಕುಟುಂಬದ ಸದಸ್ಯರು ಮಸಣ ಸೇರಿರುವುದು ಹೃದಯವಿದ್ರಾವಕ ಘಟನೆ ಇಡೀ ಜಿಲ್ಲೆಯ ಜನರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಒಬ್ಬೊಬ್ಬರದು ಒದೊಂದು ಕಥೆ ಹೇಳುತ್ತಿದೆ.&lt;/p&gt;&lt;p&gt;ಗುರುವಾರ ಬೆಳಗ್ಗೆ ಮಂತ್ರಾಲಯದತ್ತ ಸಾಗುತ್ತಿದ್ದ KA-46-9745 ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಮತ್ತು KA-32-AC-1117 ಸಂಖ್ಯೆಯ ಟ್ಯಾಂಕರ್ ನಡುವೆ ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಭೀಕರ ಅಪಘಾತ ಮಂತ್ರಾಲಯ ಮಠದಿಂದ ಸುಮಾರು 7 ಕಿ.ಮೀ ದೂರದಲ್ಲಿ ಸಂಭವಿಸಿದ್ದು, ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.&lt;/p&gt;&lt;p&gt;ಈ ಗೂಡ್ಸ್ ವಾಹನದಲ್ಲಿ ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 21 ಜನ ಪ್ರಯಾಣಿಸುತ್ತಿದ್ದು, ಅದರಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಕರ್ನೂಲ್ ಜಿಲ್ಲಾ ಆಸ್ಪತ್ರೆ ಹಾಗೂ ಏಮಿಗನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;ಒಂದೇ ಕುಟುಂಬದ ದುರಂತ&lt;/h2&gt;&lt;p&gt;ಮೃತರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಶೆಟ್ಟಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗ್ರಾಮಸ್ಥರಾಗಿದ್ದಾರೆ. ಸಂಬಂಧಿಕರೆಲ್ಲರೂ ಒಟ್ಟಾಗಿ ಮಂತ್ರಾಲಯ ಪ್ರವಾಸ ಕೈಗೊಂಡಿದ್ದರು. ಆದರೆ ಈ ಪ್ರಯಾಣವೇ ಅವರ ಜೀವನದ ಕೊನೆಯ ಪ್ರಯಾಣವಾಗಿರುವುದು ದೊಡ್ಡ ದುರಂತ&lt;/p&gt;&lt;h2&gt;ಮೃತರ ಪಟ್ಟಿ:&lt;/h2&gt;&lt;p&gt;ಕುಮಾರ್ (51)&lt;/p&gt;&lt;p&gt;ಜಯಮ್ಮ (60) &ndash; ಕುಮಾರ್ ಅವರ ಅತ್ತೆ&lt;/p&gt;&lt;p&gt;ಸುನೀಲ್ (27) &ndash; ಕುಮಾರ್ ಪುತ್ರ&lt;/p&gt;&lt;p&gt;ವೀಣಾ (25) &ndash; ಕುಮಾರ್ ಪುತ್ರಿ&lt;/p&gt;&lt;p&gt;ನಿಶಿತಾ (3) &ndash; ವೀಣಾ ಮಗಳು&lt;/p&gt;&lt;p&gt;ಲೋಲಾಕ್ಷಿ (38) &ndash; ಕುಮಾರ್ ತಮ್ಮನ ಪತ್ನಿ&lt;/p&gt;&lt;p&gt;ಪುಟ್ಟಮ್ಮ (60) &ndash; ತರೀಕೆರೆ ತಾಲೂಕು ಉಡೇವಾ ಗ್ರಾಮ&lt;/p&gt;&lt;p&gt;ಮೀನಾಕ್ಷಮ್ಮ (54) &ndash; ತರೀಕೆರೆ ತಾಲೂಕು ಉಡೇವಾ ಗ್ರಾಮ&lt;/p&gt;&lt;h2&gt;ಕನಸು ಕಂಡಿದ್ದ ಜಯಮ್ಮ&hellip; ಕನಸೇ ಉಳಿಯಿತು&lt;/h2&gt;&lt;p&gt;ಈ ದುರಂತದಲ್ಲಿ ಮೃತಪಟ್ಟ ಜಯಮ್ಮ ಅವರ ಕಥೆ ಎಲ್ಲರನ್ನೂ ಕಣ್ಣೀರಿಟ್ಟಿದೆ. 65ನೇ ವಯಸ್ಸಿನಲ್ಲಿ ಒಂದು ಮನೆ ಕಟ್ಟಬೇಕೆಂಬ ಕನಸು ಕಂಡಿದ್ದ ಅವರು, ಎಲ್ಲರೂ ಮನೆ ಕಟ್ಟಿಕೊಂಡು ಹೋಗಿದ್ದಾರೆ, ನಾವು ಕೂಡ ಕಟ್ಟೋಣ ಎಂದು ಕುಟುಂಬದವರೊಂದಿಗೆ ಹೇಳಿಕೊಂಡಿದ್ದರಂತೆ. ಧರ್ಮಸ್ಥಳ ಸಂಘದಿಂದ 3 ಲಕ್ಷ ರೂಪಾಯಿ ಸಾಲ ಪಡೆದು ಮನೆ ಕಟ್ಟುವ ಯೋಚನೆ ಮಾಡಿದ್ದ ಅವರು, ಕೂಲಿ ಕೆಲಸ ಮಾಡಿ ಸಾಲ ತೀರಿಸೋಣ ಎಂದು ನಿರ್ಧರಿಸಿದ್ದರು. ಮಂತ್ರಾಲಯದಿಂದ ಹಿಂದಿರುಗಿದ ಬಳಿಕ ಈ ಕುರಿತು ಚಿಂತನೆ ನಡೆಸಬೇಕೆಂದು ಕೊಂಡಿದ್ದರು, ಅದಕ್ಕೆ ಅವಕಾಶವೇ ಸಿಕ್ಕಿಲ್ಲ. ಮಂತ್ರಾಲಯಕ್ಕೆ ಹೊರಡುವ ಮುನ್ನ ರಾಯರಿಗೆ ಕಾಣಿಕೆ ಎಂದು ₹100 ಪಡೆದುಕೊಂಡು ಹೋಗಿದ್ದ ಜಯಮ್ಮ, ಬದುಕಿನ ಕೊನೆಯ ಪ್ರಯಾಣ ಮುಗಿಸಿರುವುದು ಅತ್ಯಂತ ದುಃಖಕರ ಸಂಗತಿ.&lt;/p&gt;&lt;h2&gt;ಹೋಗಬೇಕಿತ್ತು&hellip; ಆದರೆ ಹಣ ಇರಲಿಲ್ಲ&lt;/h2&gt;&lt;p&gt;ಕುಟುಂಬದ ಶೋಭಾ ಎಂಬವರು ಕೂಡ ಈ ಪ್ರವಾಸಕ್ಕೆ ಹೋಗಬೇಕಾಗಿತ್ತು. ಆದರೆ ಹಣದ ಅಭಾವದಿಂದ ಅವರು ಹೋಗಿರಲಿಲ್ಲ. ಹೋಗಿದ್ದರೆ ನನ್ನ ಸ್ಥಿತಿಯೂ ಇದೇ ಆಗುತ್ತಿತ್ತು ಎಂದು ಅತ್ತೆಯ ಮಾತು ನೆನೆದು ಕಣ್ಣೀರಿಟ್ಟಿದ್ದಾರೆ ಸೊಸೆ.&lt;/p&gt;&lt;h2&gt;ಗಾಯಾಳುಗಳ ಸ್ಥಿತಿ ಗಂಭೀರ&lt;/h2&gt;&lt;p&gt;ತರೀಕೆರೆ ತಾಲೂಕಿನ ಉಡೇವಾ ಗ್ರಾಮದಿಂದ ಒಟ್ಟು 9 ಜನ ತೆರಳಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;h2&gt;ಅಧಿಕಾರಿಗಳ ಭೇಟಿ, ಪ್ರಕರಣ ದಾಖಲು&lt;/h2&gt;&lt;p&gt;ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ರಾಜಕೀಯ ಮುಖಂಡರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರ್&zwnj;ಟಿಒ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಿ ಘಟನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದರು.&lt;/p&gt;&lt;p&gt;ಈ ಸಂಬಂಧ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಮೃತದೇಹಗಳನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಏಮಗನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಮೃತರ ಬಂಧುಗಳು ಸ್ಥಳಕ್ಕೆ ಆಗಮಿಸುತ್ತಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.&lt;/p&gt;&lt;h2&gt;ಗ್ರಾಮಗಳಲ್ಲಿ ನೀರವ ಮೌನ&lt;/h2&gt;&lt;p&gt;ಒಂದೇ ಕುಟುಂಬದ ಹಲವು ಮಂದಿ ಪ್ರಾಣ ಕಳೆದುಕೊಂಡಿರುವುದು ಗ್ರಾಮಗಳಲ್ಲಿ ಬಾರೀ ನೋವು ತರಿಸಿದೆ. ಬದುಕಿನ ಕನಸುಗಳನ್ನು ಹೊತ್ತು ಹೊರಟವರು ಮರಣದ ಕದ ತಟ್ಟಿದ ಈ ಘಟನೆ, ರಸ್ತೆ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚಿಂತನೆಗೆ ದಾರಿ ಮಾಡಿಕೊಟ್ಟಿದೆ.&lt;/p&gt;]]></content:encoded>
            <category>hassan</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/mantralayam-road-accident-8-from-hassan-and-chikkamagaluru-killed-in-tragic-crash-near-raichur-gdp/articleshow-z5sp26i"/>
        </item>
    </channel>
</rss>
