<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 15 Jul 2026 06:45:38 +0530</lastBuildDate>
        <atom:link href="https://kannada.asianetnews.com/rss/haveri" rel="self" type="application/rss+xml"/>
        <item>
            <title><![CDATA[ಮಗನ ಜನ್ಮದಿನಕ್ಕೆ  ಸ್ವಂತ ದುಡ್ಡಿನಲ್ಲಿ ಶಾಲೆಗೆ ಸುಣ್ಣಬಣ್ಣ ಮಾಡಿಸಿದ ಶಿಕ್ಷಕಿ ಉಮೈ ಸಲ್ಮಾ]]></title>
            <link>https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9</link>
            <guid isPermaLink="true">https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9</guid>
            <pubDate>Mon, 06 Jul 2026 06:23:56 +0530</pubDate>
            <description><![CDATA[&lt;p&gt;ಹಿರೇಕೆರೂರು ತಾಲೂಕಿನ ಹಂಸಭಾವಿ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಉಮೈ ಸಲ್ಮಾ, ತಮ್ಮ ಮಗನ ಜನ್ಮದಿನದ ನೆನಪಿಗಾಗಿ ಸ್ವಂತ ಹಣದಲ್ಲಿ ಶಾಲೆಗೆ ಸುಣ್ಣಬಣ್ಣ ಬಳಿಸಿ, ಆಟದ ಮೈದಾನ ನಿರ್ಮಿಸಿದ್ದಾರೆ. ಅವರ ಈ ಆದರ್ಶ ಕಾರ್ಯವು ಶಿಕ್ಷಕ ವಲಯದಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwtegz27bwq1h665spbx6p4c,imgname-urdu-school-teacher-1783299079239.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಉಮೈ ಸಲ್ಮಾ ಅವರು ತಮ್ಮ ಮಗ ಮಲಿಕ್ ರೆಹನ್ ಅವರ ಹುಟ್ಟುಹಬ್ಬದ ಅಂಗವಾಗಿ ₹ 2 ಲಕ್ಷ ಸ್ವಂತ ಹಣದಲ್ಲಿ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸಮಾಜಕ್ಕೆ ವಿಶಿಷ್ಟ ಹಾಗೂ ಮಾದರಿ ಸಂದೇಶವೊಂದನ್ನು ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಶಾಲೆಗೆ ಉತ್ತಮ ಗುಣಮಟ್ಟದ ಸುಣ್ಣ-ಬಣ್ಣ&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಜನರು ತಮ್ಮ ಮಕ್ಕಳ ಜನ್ಮದಿನವನ್ನು ಐಷಾರಾಮಿ ಹೋಟೆಲ್&zwnj;ಗಳಲ್ಲಿ ಅಥವಾ ಅನಗತ್ಯ ವೆಚ್ಚಗಳ ಮೂಲಕ ಆಚರಿಸಿಕೊಳ್ಳುವುದು ರೂಢಿ. ಆದರೆ ಶಿಕ್ಷಕಿ ಉಮೈ ಸಲ್ಮಾ ಅವರು ತಾವೇ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಳಿಲು ಸೇವೆ ಸಲ್ಲಿಸಲು ನಿರ್ಧರಿಸಿದರು. ತಮ್ಮ ಮಗನ ಜನ್ಮದಿನದ ಸವಿನೆನಪಿಗಾಗಿ ಸ್ವಂತ ₹ 2 ಲಕ್ಷ ವೆಚ್ಚದಲ್ಲಿ ಇಡೀ ಶಾಲೆಗೆ ಉತ್ತಮ ಗುಣಮಟ್ಟದ ಸುಣ್ಣ-ಬಣ್ಣ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ, ಶಾಲಾ ಮಕ್ಕಳಿಗೆ ಆಟವಾಡಲು ಸುಂದರ ಹಾಗೂ ಸುರಕ್ಷಿತವಾದ ಆಟದ ಮೈದಾನವನ್ನು ನಿರ್ಮಿಸಿಕೊಡುವ ಮೂಲಕ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ.&lt;/p&gt;&lt;p&gt;ಮುಖ್ಯ ಶಿಕ್ಷಕಿಯ ಈ ಸೇವಾ ಮನೋಭಾವ, ಉದಾರತೆ ಮತ್ತು ಶಿಕ್ಷಣದ ಮೇಲಿನ ಅಪಾರ ಕಾಳಜಿಯನ್ನು ಶ್ಲಾಘಿಸಿ, ಶಿಕ್ಷಕರ ಸಂಘವು ಅಭಿನಂದನೆ ಸಲ್ಲಿಸಿದೆ.&lt;/p&gt;&lt;h3&gt;&lt;strong&gt;ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಶಂಸೆ&lt;/strong&gt;&lt;/h3&gt;&lt;p&gt;ಉಮೈ ಸಲ್ಮಾ ಅವರ ಈ ಅಪೂರ್ವ ಕಾರ್ಯವು ಕೇವಲ ಹಿರೇಕೆರೂರು ತಾಲೂಕಿಗೆ ಮಾತ್ರವಲ್ಲದೆ, ಇಡೀ ಹಾವೇರಿ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಶಿಕ್ಷಕರಿಗೂ ಸ್ಫೂರ್ತಿದಾಯಕವಾಗಿದೆ. ಅವರ ಸಮಾಜಮುಖಿ ಚಿಂತನೆ, ಶಾಲಾ ಅಭಿವೃದ್ಧಿಯ ಮೇಲಿನ ಬದ್ಧತೆ ಮತ್ತು ಮಕ್ಕಳ ಭವಿಷ್ಯದ ಮೇಲಿನ ಪ್ರೀತಿ ಸದಾ ಸ್ಮರಣೀಯ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಶಂಸಿಸಿದ್ದಾರೆ. ಸರ್ಕಾರಿ ಶಾಲೆಯ ಚಿತ್ರಣವನ್ನೇ ಬದಲಾಯಿಸಿದ ಈ ಆದರ್ಶ ಶಿಕ್ಷಕಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9"/>
        </item>
        <item>
            <title><![CDATA[Farmers: ಶುಂಠಿ, ಹಸಿಮೆಣಸಿನಕಾಯಿ ಬೆಳೆದ ರೈತರಿಗೆ ದಾಖಲೆ ಸಲ್ಲಿಸಲು ಸರ್ಕಾರದಿಂದ ಸೂಚನೆ]]></title>
            <link>https://kannada.asianetnews.com/karnataka-districts/haveri-hanagal-farmers-growing-ginger-green-chillies-instructed-to-submit-documents-to-get-crop-insurance-mrq/articleshow-4yv9de5</link>
            <guid isPermaLink="true">https://kannada.asianetnews.com/karnataka-districts/haveri-hanagal-farmers-growing-ginger-green-chillies-instructed-to-submit-documents-to-get-crop-insurance-mrq/articleshow-4yv9de5</guid>
            <pubDate>Tue, 16 Jun 2026 13:46:14 +0530</pubDate>
            <description><![CDATA[&lt;p&gt;ಶುಂಠಿ ಮತ್ತು ಹಸಿಮೆಣಸಿನಕಾಯಿ ಬೆಳೆಗಾರರು ಬೆಳೆ ವಿಮೆ ಪಡೆಯಲು ದಾಖಲೆಗಳನ್ನು ಸಲ್ಲಿಸಬೇಕಿದೆ. ಹಾಗೆಯೇ, 2026-27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಈಗಾಗಲೇ ಶುಲ್ಕ ಪಾವತಿಸಿದವರಿಗೆ ಮರುಪಾವತಿ ಮಾಡಲಾಗುವುದು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kv7qv93pxjqrvf1qn915xart,imgname-farmers-1-1781597578358.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಕಳೆದ 2024-25ನೇ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹಾನಗಲ್ಲ ತಾಲೂಕಿನಲ್ಲಿ ಶುಂಠಿ 199 ಪ್ರಕರಣಗಳಿಗೆ ಮತ್ತು ಹಸಿಮೆಣಸಿನಕಾಯಿ 92 ಪ್ರಕರಣಗಳಿಗೆ ರೈತರ ಬೆಳೆ ಹೊಂದಾಣಿಕೆ ಆಗದೇ ಇರುವುದರಿಂದ ಬೆಳೆ ವಿಮೆ ಜಮೆಯಾಗಿರುವುದಿಲ್ಲ.&lt;/p&gt;&lt;p&gt;ಆದ್ದರಿಂದ 2024-25ನೇ ಸಾಲಿನ ಪಹಣೆ ಪತ್ರಿಕೆಯಲ್ಲಿ ವಿಮೆಗೆ ನೋಂದಾಯಿಸಿದ ಬೆಳೆ ನಮೂದು ಆಗಿರಬೇಕು. 2024-25ನೇ ಸಾಲಿನಲ್ಲಿ ವಿಮೆ ನೋಂದಾಯಿತ ಬೆಳೆ ಉತ್ಪನ್ನವನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ಕಂಪ್ಯೂಟರ್ ರಶೀದಿ, ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿಮೆ ನೋಂದಾಯಿತ ಉತ್ಪನ್ನವನ್ನು ಬೆಳೆ ಮಾರಾಟ ಮಾಡಿದ್ದಲ್ಲಿ ಸೂಕ್ತ ದಾಖಲೆ, ವಿಮೆ ನೋಂದಾಯಿತ ಬೆಳೆಯನ್ನು ಬೆಳೆಯಲು ಮೇಲಿನ ಸಾಲಿನಲ್ಲಿ ಬ್ಯಾಂಕಿನಿಂದ ಬೆಳೆಸಾಲ ಪಡೆದಿದ್ದಲ್ಲಿ ಬ್ಯಾಂಕಿನವರಿಂದ ದೃಢೀಕೃತ ಪ್ರತಿಗಳು, ಇವುಗಳಲ್ಲಿ ಯಾವುದಾದರೂ ಒಂದು ದಾಖಲಾತಿಯನ್ನು ಮೇಲಿನ ವರ್ಷಕ್ಕೆ ಸಂಬಂಧಿಸಿದಂತೆ ಇದ್ದಲ್ಲಿ ಸಂಬಂಧಿಸಿದ ರೈತರು ಈ ಪ್ರಕಟಣೆ ದಿನಾಂಕದಿಂದ 15 ದಿನಗಳೊಳಗಾಗಿ ಹಾನಗಲ್ ತೋಟಗಾರಿಕೆ ಇಲಾಖೆ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು ಎಂದು ಹಾನಗಲ್ಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.&lt;/p&gt;&lt;h2&gt;&lt;strong&gt;ವಿದ್ಯಾರ್ಥಿಗಳ ಬಸ್ ಸೇವಾಸಿಂಧು ಪೋರ್ಟಲ್ ಮೂಲಕ ವಿತರಣೆ&lt;/strong&gt;&lt;/h2&gt;&lt;p&gt;ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, 2026-27ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿ ಬಸ್ ಪಾಸ್&zwnj;ಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ವಿತರಿಸಲಾಗುತ್ತಿದೆ.&lt;/p&gt;&lt;p&gt;ಕರ್ನಾಟಕ ಸರ್ಕಾರವು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್&zwnj;ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.&lt;/p&gt;&lt;p&gt;ಜೂ.12ರಿಂದ ಸಂಸ್ಥೆಯ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸುಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿ ಇತ್ಯಾದಿ) ಮುಂದುವರೆಸಲಾಗಿದೆ.&lt;/p&gt;&lt;p&gt;ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು, ಈ ಹಿಂದಿನಂತೆ ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್&zwnj;ನಲ್ಲಿ, ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ, ಆನ್&zwnj;ಲೈನಲ್ಲಿ ಅರ್ಜಿ ಸಲ್ಲಿಸಬಹುದು. ಆನಲೈನ್ ಸೇವಾಸಿಂಧು ಪೋರ್ಟಲ್ ಐಡಿ, ವಾ.ಕ.ರ.ಸಾ. ಸಂಸ್ಥೆ ವ್ಯಾಪ್ತಿಯ 82 ಪಾಸ್ ವಿತರಣಾ ಕೌಂಟರ್&zwnj;ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್&zwnj;ಸೈಟ್&zwnj;ನಲ್ಲಿ ಒದಗಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಫ್ರಿ ಬಸ್ ಸ್ಮಾರ್ಟ್&zwnj;ಕಾರ್ಡ್&zwnj; ವಿತರಣೆಗೆ ಸಿದ್ಧವಾಯ್ತು ಹೊಸ ಸೂತ್ರ: ಸಚಿವ ಬೈರತಿ ಸುರೇಶ್&zwnj;&lt;/strong&gt;&lt;/p&gt;&lt;p&gt;ನಿಗಮದ ವೆಬ್&zwnj;ಸೈಟ್ ವಿಳಾಸ&amp;nbsp;; ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್ ಪಾಸುಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು. ರಾಜ್ಯದಲ್ಲಿ ವಾಸವಿದ್ದು, ನೆರೆರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.&lt;/p&gt;&lt;p&gt;ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷ 2026-27ನೇ ಸಾಲಿನಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಸ್ಥಗಿತದ ಸುದ್ದಿಗೆ ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-hanagal-farmers-growing-ginger-green-chillies-instructed-to-submit-documents-to-get-crop-insurance-mrq/articleshow-4yv9de5"/>
        </item>
        <item>
            <title><![CDATA[ಕೈಕೊಟ್ಟ ಮಳೆ: 11 ಎಕ್ರೆ ಗೋವಿನಜೋಳದ ಬೆಳೆ ಟ್ರ‍್ಯಾಕ್ಟರ್‌ನಿಂದ ನಾಶ ಮಾಡಿದ ಹಾವೇರಿ ರೈತ]]></title>
            <link>https://kannada.asianetnews.com/karnataka-districts/haveri-bydadgi-lack-of-monsoon-rains-shidenoor-village-farmer-destroys-11-acres-of-crop-with-tractor-mrq/articleshow-5br2og5</link>
            <guid isPermaLink="true">https://kannada.asianetnews.com/karnataka-districts/haveri-bydadgi-lack-of-monsoon-rains-shidenoor-village-farmer-destroys-11-acres-of-crop-with-tractor-mrq/articleshow-5br2og5</guid>
            <pubDate>Tue, 23 Jun 2026 07:27:17 +0530</pubDate>
            <description><![CDATA[&lt;p&gt;ರೈತರೊಬ್ಬರು, ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹತಾಶರಾಗಿ, ತಾವು ಬೆಳೆದಿದ್ದ 11 ಎಕರೆ ಗೋವಿನಜೋಳದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ನಷ್ಟ ಅನುಭವಿಸಿರುವ ಅವರು, ಸರ್ಕಾರದ ನೆರವಿಗಾಗಿ ಒತ್ತಾಯಿಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvs2tdpwfrrpjhj8h4m0cs8t,imgname-haveri-farmer-1782179509980.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕಂಗಾಲಾದ ರೈತನೊಬ್ಬ ಅಪಾರ ವೆಚ್ಚದಲ್ಲಿ ಬೆಳೆಸಿದ್ದ 11 ಎಕರೆ ಗೋವಿನ ಜೋಳ ಬೆಳೆಯನ್ನು ಟ್ರ&zwj;್ಯಾಕ್ಟರ್ ಕುಂಟೆ ಮೂಲಕ ಹರಗಿ ನಾಶಪಡಿಸಿದ ಘಟನೆ ತಾಲೂಕಿನ ಶಿಡೇನೂರ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ಶಿಡೇನೂರ ಗ್ರಾಮದ ರೈತ ಕಿರಣಕುಮಾರ ಗಡಿಗೋಳ ಬೆಳೆ ನಾಶಪಡಿಸಿದ ರೈತ. ಎಷ್ಟೇ ಕಾದರೂ ಮಳೆ ಬಾರದೆ ಬೆಳೆ ಒಣಗಿ ಹೋಗುತ್ತಿರುವುದನ್ನು ನೋಡಿ ಕಂಗಾಲಾಗಿ ಬೆಳೆ ನಾಶ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;11 ಎಕರೆ ಲಾವಣಿ ಹೊಲ ನಾಶ&lt;/strong&gt;&lt;/h2&gt;&lt;p&gt;ಕಿರಣಕುಮಾರ ಗಡಿಗೋಳ ತಮ್ಮ ಸ್ವಂತ ಜಮೀನಿನ ಜೊತೆಗೆ ಲಾವಣಿ ಪಡೆದ ಜಮೀನು ಸೇರಿ ಒಟ್ಟು 11 ಎಕರೆ ಪ್ರದೇಶದಲ್ಲಿ ಗೋವಿನ ಜೋಳ ಬೆಳೆ ಬೆಳೆದಿದ್ದರು, ಪೂರ್ವ ಮುಂಗಾರು ಉತ್ತಮವಾಗಿದ್ದ ಹಿನ್ನೆಲೆಯಲ್ಲಿ ಉತ್ತಮ ಬೆಳೆ ನಿರೀಕ್ಷೆ ಹೊಂದಿದ್ದರು. ಆದರೆ ಕಳೆದ ಒಂದು ತಿಂಗಳಿಂದ ಮಳೆ ಸಂಪೂರ್ಣವಾಗಿ ಕೈ ಕೊಟ್ಟಿದ್ದು ಇದರಿಂದ ಬೇಸತ್ತು ಬೆಳೆ ನಾಶದ ನಿರ್ಧಾರ ಮಾಡಿದ್ದಾರೆ.&lt;/p&gt;&lt;h3&gt;&lt;strong&gt;₹2 ಲಕ್ಷ ನಷ್ಟ&lt;/strong&gt;&lt;/h3&gt;&lt;p&gt;ಸುಮಾರು 2 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿ ಉತ್ತಮ ಗುಣಮಟ್ಟದ ಬೀಜ, ಗೊಬ್ಬರ ಹಾಗೂ ಕೃಷಿ ಕಾರ್ಯಗಳಿಗೆ ಹಣ ಹೂಡಿಕೆ ಮಾಡಿದ್ದರು. ಆದರೆ, ಬಿತ್ತನೆ ಬಳಿಕ ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆ ಒಣಗಿ ಹೋಗಿದ್ದು, ಹೂಡಿಕೆ ಮಾಡಿದ ಹಣವೂ ಕೈತಪ್ಪುವ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದ ತೀವ್ರ ನಿರಾಶೆಗೊಂಡ ರೈತ ಕಿರಣಕುಮಾರ ಗಡಿಗೋಳ ಟ್ರ&zwj;್ಯಾಕ್ಟರ್&zwnj;ನಿಂದ ಕುಂಟೆ ಹೊಡೆಸಿ ಸಂಪೂರ್ಣ ಬೆಳೆ ನಾಶಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೊನ್ನಾಳಿ-ದಾವಣಗೆರೆಗೆ ಬಸವಾಪಟ್ಟಣ ಮೂಲಕ ಹೊಸ ಬಸ್ ಆರಂಭ; ಮಾರ್ಗ, ಸಮಯ ಈ ರೀತಿಯಾಗಿದೆ&lt;/strong&gt;&lt;/p&gt;&lt;p&gt;ಪ್ರಸ್ತುತ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆ ಅಭಾವ ಮುಂದುವರಿದರೆ ಕೃಷಿ ಆಧಾರಿತ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀಳುವ ಸಾಧ್ಯತೆಯಿದೆ. ಸರ್ಕಾರ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ, ಸಾಲ ಮರುಪಾವತಿ ಅವಧಿ ವಿಸ್ತರಣೆ ಹಾಗೂ ಅಗತ್ಯ ನೆರವು ನೀಡುವಂತೆ ರೈತರಾದ ಶಿವಪ್ಪ ತೆವರಿ, ಪ್ರಭು ಬಿದರಿ, ಗಣೇಶ ಯೋಗಿಕೊಪ್ಪ, ಶಂಭು ಭಾವಿಕಟ್ಟಿ, ಮಲ್ಲಿಕಾರ್ಜುನ ದುರ್ಗದ, ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.&lt;/p&gt;&lt;p&gt;ಕೃಷಿಗೆ ಮಾಡಿದ ಎಲ್ಲ ಹೂಡಿಕೆ ಮಣ್ಣಾಯಿತು. ಸಾಲ ಮಾಡಿ ಕೃಷಿ ಮಾಡಿದ್ದೇವೆ. ಮಳೆ ಕೈಕೊಟ್ಟಿದ್ದರಿಂದ ಬದುಕೇ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಕೂಡಲೇ ರೈತರಿಗೆ ನೆರವಾಗಿ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು. ಜೊತೆಗೆ ಹಸಿರು ಬರಗಾಲ ಎಂದು ಘೋಷಿಸಿ ಜಿಲ್ಲೆಯ ರೈತರಿಗೆ ವಿಶೇಷ ನೆರವು ನೀಡಬೇಕು ಎಂದು ಶಿಡೆನೂರ ರೈತ ಕಿರಣಕುಮಾರ ಗಡಿಗೋಳ ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Haveri: ಮಕ್ಕಳನ್ನೇ ಜೋಡೆತ್ತು ಮಾಡಿ ಎಡೆಕುಂಟೆ ಹೊಡೆದ ಅಪ್ಪ; ಎತ್ತುಗಳ ಖರೀದಿಗಿಲ್ಲ ಹಣ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-bydadgi-lack-of-monsoon-rains-shidenoor-village-farmer-destroys-11-acres-of-crop-with-tractor-mrq/articleshow-5br2og5"/>
        </item>
        <item>
            <title><![CDATA[ಹಾವೇರಿ: ಕಾರ ಹುಣ್ಣಿಮೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ರೈತನ ಮೇಲೆ ಹಲ್ಲೆ, ಪಟಾಕಿ ಸಿಡಿಸಿದ್ದೇ ತಪ್ಪಾಯ್ತಾ?]]></title>
            <link>https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08</link>
            <guid isPermaLink="true">https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08</guid>
            <pubDate>Tue, 30 Jun 2026 06:16:16 +0530</pubDate>
            <description><![CDATA[&lt;p&gt;ಕಾರ ಹುಣ್ಣಿಮೆ ದಿನದಂದು ಹೋರಿಗಳನ್ನ ಓಡಿಸುವ ಸ್ಪರ್ಧೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆಂದು ಅನ್ಯಕೋಮಿನ ಗುಂಪೊಂದು ರೈತನೋರ್ವನ ಕೈ &amp;nbsp;ಕಡಿದ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwazgqb6qpk2y42ktv76n8fv,imgname----------------------58--1782780026214.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾನಗಲ್ಲ (ಜೂ.30): &lt;/strong&gt;ಹಾವೇರಿ(Haveri) ಜಿಲ್ಲೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮ(Naregal village)ದಲ್ಲಿ ಕಾರಹುಣ್ಣಿಮೆ ಹಬ್ಬದಂಗವಾಗಿ ಸಂಪ್ರದಾಯದಂತೆ ಹೋರಿಗಳನ್ನು ಓಡಿಸುವ(Bull racing competition) ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಕಾರಣಕ್ಕೆ ಎರಡು ಕೋಮಿನ ಜನರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ಕೈ ಕಡಿಯಲಾಗಿದೆ. ಒಟ್ಟು 8 ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.&lt;/p&gt;&lt;h2&gt;ಕಾರ ಹುಣ್ಣಿಮೆ: ನರೇಗಲ್ ಗ್ರಾಮದಲ್ಲಿ ನಡೆದಿದ್ದೇನು?&lt;/h2&gt;&lt;p&gt;ಕಾರಹುಣ್ಣಿಮೆ ಅಂಗವಾಗಿ ನರೇಗಲ್ಲ ಗ್ರಾಮದಲ್ಲಿ ಪ್ರತಿ ವರ್ಷದಂತೆ ಸೋಮವಾರವೂ ಹೋರಿ ಓಡಿಸುವ ಕಾರ್ಯಕ್ರಮವಿತ್ತು. ಅದರಂತೆ ಮಧ್ಯಾಹ್ನ ರೈತರು ತಮ್ಮ ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಗ್ರಾಮದ ಮಸೀದಿ ಬಳಿ ಪಟಾಕಿ ಸಿಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಾಷಾಸಾಬ ಗೌಂಡಿ ಎಂಬುವರು &lsquo;ನಮ್ಮ ಮಸೀದಿ ಬಳಿ ಏಕೆ ಪಟಾಕಿ ಸಿಡಿಸುತ್ತೀರಾ&rsquo; ಎಂದು ಪ್ರಶ್ನಿಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಹೋರಿ ಹಿಂದೆ ಬಂದಿದ್ದ ಲೋಹಿತ್ ಜಯಪ್ಪ(Lohit Jayappa) ಎಂಬುವರನ್ನು ಅನ್ಯಕೋಮಿನವರು ಥಳಿಸಿದರು. ಇದರಿಂದ ರೊಚ್ಚಿಗೆದ್ದ ಹಿಂದೂ ಯುವಕರ ಗುಂಪು ಕುಡುಗೋಲು ಮತ್ತಿತರ ಆಯುಧಗಳಿಂದ ಪ್ರತಿದಾಳಿ ನಡೆಸಿತು.&lt;/p&gt;&lt;p&gt;ಘರ್ಷಣೆಯಲ್ಲಿ ಶಿವರಾಜ್ ಕುರುಬರ (27), ನಾಗಪ್ಪ ಹನುಮಂತಪ್ಪ ಕುರುಬರ (34), ಮಲ್ಲಪ್ಪ ರಾಯಪ್ಪ ಕೊಡಸಂಗಿ (30), ನಿಂಗರಾಜ ಮಹಾಂತೇಶ ಕುರುಬರ (30), ಜಯಪ್ಪ ಸಂಗಪ್ಪ ಕುರುಬರ (20), ಲೋಹಿತ ರೇವಣಪ್ಪ ಕುರುಬರ (24), ಬಾಷಾಸಾಬ ಗೌಂಡಿ (55), ಖಾಜಾ ಗೌಂಡಿ (18) ಎಂಬುವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವರಾಜ ಕುರುಬರ, ಜಯಪ್ಪ ಕುರುಬರ ಹಾಗೂ ಲೋಹಿತ ಕುರುಬರ ಅವರನ್ನು ಹುಬ್ಬಳ್ಳಿ ಕಿಮ್ಸ್&zwnj;ಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಕೈ ಕಡಿಯಲಾಗಿದೆ. ಉಳಿದವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;p&gt;ಘಟನೆಯಿಂದಾಗಿ ನರೇಗಲ್ಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್&zwnj; ಬಂದೋಬಸ್ತ್&zwnj; ಏರ್ಪಡಿಸಲಾಗಿದೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08"/>
        </item>
        <item>
            <title><![CDATA[Haveri: ಕ್ಷುಲ್ಲಕ ಜಗಳಕ್ಕೆ ಬಲಿಯಾದ ಬೀದಿ ಬದಿ ವ್ಯಾಪಾರಿ! ಇದು ಒಂದು ಮೊಟ್ಟೆಯ ಕಥೆ!]]></title>
            <link>https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640</link>
            <guid isPermaLink="true">https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640</guid>
            <pubDate>Thu, 02 Jul 2026 17:18:13 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕವಿಚಾರಕ್ಕೆ ಬೀದಿ ಬದಿ ವ್ಯಾಪಾರಿಬ್ಬರು ಕೊಲೆಯಾಗಿದ್ದಾರೆ. ಸುಕಾ ಸುಮ್ಮನೆ ಶುರುವಾದ ಜಗಳ ತಾರಕಕ್ಕೇರಿ, ನಾಲ್ವರು ಯುವಕರು ಹಲ್ಲೆ ನಡೆಸಿದ್ದರಿಂದ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwhact88v2wkd6ajak7ksxj8,imgname-shivaji-1782992759048.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಬೀದಿ-ಬದಿ ವ್ಯಾಪಾರಿ ಮೇಲೆ ಮನಸ್ಸೊಯಿಚ್ಚೆ ಹಲ್ಲೆಮಾಡಿ ಕೊಲೆ ಮಾಡಿರುವ ಘಟನೆ ನಿನ್ನೆ ಸಂಜೆ 7ಕ್ಕೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಹಲ್ಲೆಯ ತೀವ್ರತೆಗೆ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ಕೆಲವೇ ಗಂಟೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್&zwnj;ರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;h2&gt;&lt;strong&gt;ಅಷ್ಟಕ್ಕೂ ಆಗಿದ್ದೇನು?&lt;/strong&gt;&lt;/h2&gt;&lt;p&gt;ಮೊಟ್ಟೆ ತರಲು ಬಂದ ವಾಸಿಂ ಎಂಬ ಆರೋಪಿ 100 ರೂ., ನೀಡಿ 5 ಮೊಟ್ಟೆ ಕೇಳಿದ್ದಾನೆ. ನಂತರ 100 ಅಲ್ಲಾ 500 ಕೊಟ್ಟಿದ್ದೇನೆ ಎಂದು ಜಗಳಕ್ಕಿಳಿದಿದ್ದಾನೆ. ಅವನು ಹಾಗೂ ಅವನ ಜತೆ ಇದ್ದ ಮೂವರು ಸೇರಿ ಎದೆಗೆ ಕಾಲಿನಿಂದ ಒದ್ದು ಹಲ್ಲೆಗೈದ ನಾಲ್ವರು ಯುವಕರು ಕೊಲೆಗೈದಿದ್ದಾರೆ. ಶಿವಾಜಿ ರಾವ್&zwnj; ಬೈರೋಜಿ (55) ಮೃತ ವ್ಯಕ್ತಿ.&lt;/p&gt;&lt;h3&gt;&lt;strong&gt;ತಂದೆಗಿಂತ ಮೊದಲು ಮಗನ ಜತೆ ಜಗಳ!&lt;/strong&gt;&lt;/h3&gt;&lt;p&gt;ಈ ಹಿಂದೆ ಹೇಳಿಂದಂತೆ ಮೊಟ್ಟೆ ಖರೀದಿಸಲು ಅಂಗಡಿಗೆ ನಾಲ್ವರು ಮುಸ್ಲಿಂ ಯುವಕರು ಬಂದಿದ್ದಾರೆ. ನಾವು ಕೊಟ್ಟಿದ್ದು ₹500 ಎಂದು ವಾಸೀಮ್ ಜಗಳ ತೆಗೆದಿದ್ದಾನೆ. ಇಲ್ಲ ಕೊಟ್ಟಿದ್ದು ₹100 ಎಂದಿದ್ದಕ್ಕೆ ಮೃತ ಶಿವಾಜಿರಾವ್ ಮಗನ ಜೊತೆ ಗಲಾಟೆ ಮಾಡಿದ್ದರು. ಮಗನ ಜೊತೆ ಗಲಾಟೆ ಬಿಡಿಸಲು ಬಂದಾಗ ತಂದೆ ಮೇಲೆ ಆ ಯುವಕರು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ವಾಸೀಮ್ ಮುಲ್ಲಾ,ಸರ್ಪರಾಜ್ ಮುಲ್ಲಾ,ಸಾದಿಕ್ ಮುಲ್ಲಾ ಹಾಗೂ ಶಿರಾಜ್ ಮುಲ್ಲಾ ಆರೋಪಿಗಳಾಗಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆ ಬಳಿಕ ಆಗಿದ್ದೇನು?&lt;/strong&gt;&lt;/h3&gt;&lt;p&gt;ಶಿವಾಜಿರಾವ್ ಮೃತದೇಹವನ್ನು ಮರೋಣತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಘಟನೆ ಬಗ್ಗೆ ಶಿವಾಜಿರಾವ್ ಮಗ ಭರತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಐಜಿ ರವಿಕಾಂತೇಗೌಡ ಹಾಗೂ ಎಸ್ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಸಧ್ಯ ಈ ಘಟನೆಯಿಂದಾಗಿ ರಟ್ಟಿಹಳ್ಳಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿದೆ. ಸಧ್ಯಕ್ಕೆ ರಟ್ಟಿಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.&lt;/p&gt;&lt;h3&gt;&lt;strong&gt;ಘಟನೆ ಕುರಿತು ಎಸ್&zwnj;ಪಿ ಹೇಳಿದ್ದೇನು?&lt;/strong&gt;&lt;/h3&gt;&lt;p&gt;ಘಟನೆ ಕುರಿತು ಮಾತನಾಡಿದ ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ, ಈ ಪ್ರಕರಣದಲ್ಲಿ ನಾಲ್ವರ ಮೇಲೆ ಕಂಪ್ಲೇಂಟ್ ಆಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾ. ಅವನನ್ನೂ ಕೂಡಾ ಬಂಧಿಸುತ್ತೇವೆ ಎಂದು ಖಡಕ್&zwnj; ಮಾತನ್ನು ಆಡಿದ್ದಾರೆ. ಆರೋಪಿಗಳಾದ ವಾಸಿಂ, ಸರ್ಪರಾಜ್, ಸಾಧಿಕ್ ಬಂಧಿಸಲಾಗಿದೆ. ಸಿರಾಜ್ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.&lt;/p&gt;&lt;h3&gt;&lt;strong&gt;ಗೂಡಂಗಡಿ ಇಟ್ಟುಕೊಂಡಿದ್ದ ಶಿವಾಜಿರಾವ್&zwnj;!&lt;/strong&gt;&lt;/h3&gt;&lt;p&gt;ಮೃತ ಶಿವಾಜಿ ರಾವ್ ಗೂಡಂಗಡಿ ಇಟ್ಟುಕೊಂಡು ಜೀವನ ಸಾಗಿಸಿದ್ದರು.ಈ ವೇಳೆ ಗಲಾಟೆ ಆಗಿ ತಳ್ಳಾಟ ಆಗಿದೆ. ಈ ಹಿನ್ನೆಲೆಯಲ್ಲಿ ಗಲಾಟೆ ವೇಳೆ ಶಿವಾಜಿ ರಾವ್ ತಳ್ಳಿದ್ದಕ್ಕೆ ಕೆಳಗೆ ಬಿದ್ದಿದಾರೆ. ಶಿವಾಜಿ ರಾವ್ ಸ್ಥಳದಲ್ಲೇ ಅನ್ ಕಾನ್ಸಿಯಸ್ ಆಗಿದ್ದಾರೆ. ಮುಂದೆ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತ ಪಟ್ಟಿರೋದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;h3&gt;&lt;strong&gt;ಎಲ್ಲರೂ ಆಪ್ತರೇ ಆಗಿದ್ರಾ?&lt;/strong&gt;&lt;/h3&gt;&lt;p&gt;ನಾಲ್ವರು ಆರೋಪಿಗಳು ಸ್ವಂತ ಅಣ್ಣ ತಮ್ಮಂದಿರಾಗಿದ್ದಾರೆ. ಆರೋಪಿಗಳ ಅಪ್ಪ ಹಾಗೂ ಮೃತ ಪಟ್ಟ ಶಿವಾಜಿ ರಾವ್ ಇಬ್ಬರೂ &zwnj;ಪರಸ್ಪರ ಗೊತ್ತಿರೋರೇ ಆಗಿದ್ದಾರೆ. ತಳ್ಳಾಟದಲ್ಲಿ ಈ ತರ ಡೆತ್ ಆಗಿದೆ, ಇದು ಕಮ್ಯುನಲ್ ಅಟೆಂಪ್ಟ್&zwnj; ಅಲ್ಲ ಎನ್ನುವುದು ಪೊಲೀಸ್&zwnj; ಮೂಲಗಳಿಂದ ತಿಳಿದು ಬಂದಿದೆ. ಮೃತ ಶಿವಾಜಿ ರಾವ್ ದೇಹದ ಮೇಲೆ ಮೇಲ್ಮೋಟಕ್ಕೆ ಎಲ್ಲೂ ಗಾಯಗಳಿಲ್ಲ ಅಂತ ಮಾಹಿತಿ ಇದೆ. ಪಿಎಂ ವರದಿ ಬಂದ ಮೇಲೆ ಎನಾಗಿದೆ ಎಂದು ಗೊತ್ತಾಗಲಿದೆ. ಪೊಲೀಸ್&zwnj;ರು ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640"/>
        </item>
        <item>
            <title><![CDATA[ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ  ವೈದ್ಯರಿಲ್ಲ, ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವು! ರೊಚ್ಚಿಗೆದ್ದ ಕುಟುಂಬ]]></title>
            <link>https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z</link>
            <guid isPermaLink="true">https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z</guid>
            <pubDate>Fri, 10 Jul 2026 13:02:14 +0530</pubDate>
            <description><![CDATA[ಹಾವೇರಿ ತಾಲ್ಲೂಕಿನ ಹಾವನೂರು ಗ್ರಾಮದಲ್ಲಿ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೆ ಒಂದು ವರ್ಷದ ಹೆಣ್ಣು ಮಗು ಸಾವನ್ನಪ್ಪಿದೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಆಸ್ಪತ್ರೆಯ ಮುಂದೆ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ವೈದ್ಯರ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx5ev9k9fp859rdrb9dxqgm3,imgname-haveri-government-hospital-negligence-1783668516456.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಸರ್ಕಾರಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೈದ್ಯರು ಸಿಗದೆ, ಸೂಕ್ತ ಚಿಕಿತ್ಸೆ ಲಭಿಸದೇ ಕೇವಲ ಒಂದು ವರ್ಷದ ಹೆಣ್ಣು ಮಗುವೊಂದು ಪ್ರಾಣ ಕಳೆದುಕೊಂಡಿರುವ ಕರುಳು ಹಿಂಡುವ ಘಟನೆ ಹಾವೇರಿ ತಾಲ್ಲೂಕಿನ ಹಾವನೂರು ಗ್ರಾಮದಲ್ಲಿ ನಡೆದಿದೆ. ಭವಾನಿ ಮಹೇಶ ಕಿಳ್ಳಿಕ್ಯಾತರ್ (1 ವರ್ಷ) ಮೃತಪಟ್ಟ ದುರ್ದೈವಿ ಮಗುವಾಗಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆಯ ಮುಂದೆಯೇ ಮಗುವಿನ ಶವವನ್ನಿಟ್ಟು ತೀವ್ರ ಪ್ರತಿಭಟನೆ ನಡೆಸಿದ್ದಾರೆ.&lt;/p&gt;&lt;h2&gt;ಆಟವಾಡುತ್ತಿದ್ದ ಮಗು ಏಕಾಏಕಿ ಮೂರ್ಛೆ ಹೋಗಿತ್ತು:&lt;/h2&gt;&lt;p&gt;ಮಗು ಭವಾನಿ ಮನೆಯಲ್ಲಿ ಎಂದಿನಂತೆ ನಗುನಗುತ್ತಾ ಆಟವಾಡುತ್ತಿತ್ತು. ಆದರೆ ಆಟವಾಡುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಮಗು ಪ್ರಜ್ಞೆ ತಪ್ಪಿ ಮೂರ್ಛೆ ಹೋಗಿದೆ. ಇದರಿಂದ ತೀವ್ರ ಆತಂಕಗೊಂಡ ಪೋಷಕರು ತಕ್ಷಣವೇ ಮಗುವನ್ನು ಉಪಚರಿಸಲು ಹಾವನೂರು ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಇರಲಿಲ್ಲ ವೈದ್ಯರು&lt;/h2&gt;&lt;p&gt;ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಅಲ್ಲಿ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರಲಿಲ್ಲ ಎನ್ನಲಾಗಿದೆ. ಮಗುವಿನ ಸ್ಥಿತಿ ಗಂಭೀರವಾಗಿದ್ದರೂ ತುರ್ತು ಚಿಕಿತ್ಸೆ ನೀಡಲು ವೈದ್ಯರಿಲ್ಲದ ಕಾರಣ ಪೋಷಕರು ಅಸಹಾಯಕರಾಗಿ ಕಣ್ಣೀರು ಹಾಕಿದ್ದಾರೆ. ಅಲ್ಲಿ ಯಾವುದೇ ಸಕಾಲಿಕ ವೈದ್ಯಕೀಯ ನೆರವು ಸಿಗದ ಹಿನ್ನೆಲೆಯಲ್ಲಿ, ಅನಿವಾರ್ಯವಾಗಿ ಹಾವನೂರಿನ ಪಕ್ಕದ ಪಟ್ಟಣವಾದ ಗುತ್ತಲದ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲು ನಿರ್ಧರಿಸಿದ್ದಾರೆ. ಆದರೆ, ದುರದೃಷ್ಟವಶಾತ್ ಹಾವನೂರಿನಿಂದ ಗುತ್ತಲ ಪಟ್ಟಣದ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಮಗು ಜೀವ ಕಳೆದುಕೊಂಡಿದೆ. ಸಕಾಲಕ್ಕೆ ಹಾವನೂರು ಆಸ್ಪತ್ರೆಯಲ್ಲೇ ಚಿಕಿತ್ಸೆ ಸಿಕ್ಕಿದ್ದರೆ ನಮ್ಮ ಮಗು ಬದುಕುತ್ತಿತ್ತು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.&lt;/p&gt;&lt;h2&gt;ಶವವಿಟ್ಟು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ:&lt;/h2&gt;&lt;p&gt;ವೈದ್ಯರ ಬೇಜವಾಬ್ದಾರಿತನ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ರೊಚ್ಚಿಗೆದ್ದ ಪೋಷಕರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಮಗುವಿನ ಶವವನ್ನು ಹಾವನೂರು ಸರ್ಕಾರಿ ಆಸ್ಪತ್ರೆಯ ಮುಂದೆಯೇ ಇಟ್ಟು ಧರಣಿ ಕುಳಿತರು. ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಗೈರುಹಾಜರಿಯಿಂದಾಗಿ ಬಡವರ ಜೀವಗಳು ಬಲಿಯಾಗುತ್ತಿವೆ ಎಂದು ಸಾರ್ವಜನಿಕರು ಆಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;h2&gt;ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಭೇಟಿ:&lt;/h2&gt;&lt;p&gt;ಪ್ರತಿಭಟನೆಯ ವಿಷಯ ತಿಳಿಯುತ್ತಿದ್ದಂತೆ ಹಾವೇರಿ ತಾಲ್ಲೂಕು ವೈದ್ಯಾಧಿಕಾರಿ (ಟಿ.ಎಚ್.ಒ) ಡಾ. ಪ್ರಭಾಕರ್ ಕುಂದೂರ ಅವರು ತಕ್ಷಣ ಹಾವನೂರು ಆಸ್ಪತ್ರೆಗೆ ಭೇಟಿ ನೀಡಿದರು. ಸ್ಥಳದಲ್ಲಿದ್ದ ಉದ್ರಿಕ್ತ ಜನರನ್ನು ಮಾತುಕತೆ ನಡೆಸಿ ಮಗುವಿನ ಕುಟುಂಬ ಸದಸ್ಯರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ವೇಳೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಮುಗಿಬಿದ್ದು, ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದರು.&lt;/p&gt;&lt;h2&gt;ಪೊಲೀಸ್ ಪ್ರಕರಣ ದಾಖಲು:&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಸದ್ಯ ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಮುಂದಿನ ತನಿಖೆ ಪ್ರಗತಿಯಲ್ಲಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z"/>
        </item>
        <item>
            <title><![CDATA[ವಾಟ್ಸಾಪ್ ಯುನಿವರ್ಸಿಟಿ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/karnataka-districts/mp-basavaraj-bommai-on-assembly-ticket-rumours-haveri-gvd/articleshow-bs2v8ap</link>
            <guid isPermaLink="true">https://kannada.asianetnews.com/karnataka-districts/mp-basavaraj-bommai-on-assembly-ticket-rumours-haveri-gvd/articleshow-bs2v8ap</guid>
            <pubDate>Tue, 09 Jun 2026 21:27:00 +0530</pubDate>
            <description><![CDATA[&lt;p&gt;ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ಹರಿದಾಡುತ್ತಿರುವ ಸುದ್ದಿಗಳು 'ವಾಟ್ಸಾಪ್ ಯುನಿವರ್ಸಿಟಿ'ಯ ಸೃಷ್ಟಿಯಾಗಿದ್ದು, ಅಂತಹ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g13n41gvc7eqbjx6sbynt5ry,imgname-basavaraj-bommai---kalburgi.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜೂ.09): &lt;/strong&gt;ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ಹರಿದಾಡುತ್ತಿರುವ ಸುದ್ದಿಗಳು 'ವಾಟ್ಸಾಪ್ ಯುನಿವರ್ಸಿಟಿ'ಯ ಸೃಷ್ಟಿಯಾಗಿದ್ದು, ಅಂತಹ ಸುದ್ದಿಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.&lt;/p&gt;&lt;p&gt;ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ರಾಜ್ಯಸಭೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮರು ಆಯ್ಕೆ ಕುರಿತು ಪಕ್ಷದ ಉನ್ನತ ನಾಯಕರು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳು, ಎಸ್&zwnj;ಸಿ ಹಾಗೂ ಎಸ್&zwnj;ಟಿ ಸಮುದಾಯಗಳ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.&lt;/p&gt;&lt;p&gt;ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಯುದ್ಧ ಪರಿಸ್ಥಿತಿ ಉಂಟಾಗಿರುವುದರಿಂದ ಸಮಸ್ಯೆಗಳು ಎದುರಾಗಿವೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಬೇರೆ ರೀತಿಯಲ್ಲಿ ಹೊಂದಾಣಿಕೆ ಮಾಡಲಾಗುತ್ತಿದೆ. ಆದರೆ ಅಡುಗೆ ಅನಿಲದ ಬಹುಪಾಲು ಮಧ್ಯ ಪ್ರಾಚ್ಯದ ದೇಶಗಳಿಂದಲೇ ಬರಬೇಕಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಆದರೂ ಸಿಲಿಂಡರ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳು ಪೆಟ್ರೋಲಿಯಂ ಉಪ ಉತ್ಪನ್ನಗಳಾಗಿವೆ. ರಷ್ಯಾ, ಮೊರಾಕ್ಕೊ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಇವುಗಳ ಪೂರೈಕೆ ನಡೆಯುತ್ತಿದ್ದು, ಯುದ್ಧದ ಪರಿಣಾಮವಾಗಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆಗಳು ಎದುರಾಗಿವೆ ಎಂದರು.&lt;/p&gt;&lt;h2&gt;&lt;strong&gt;ಸಚಿವ ಸ್ಥಾನಕ್ಕಾಗಿ ನಮ್ಮ ಹೆಸರು ಬಳಕೆ&lt;/strong&gt;&lt;/h2&gt;&lt;p&gt;ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಿರುಕುಳ ನೀಡುತ್ತಿದ್ದಾರೆ ಎಂಬ ಶಾಸಕ ಯಾಸೀರ್&zwnj; ಅಹ್ಮದ್&zwnj;ಖಾನ್ ಪಠಾಣ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಿರುಕುಳ ಎಂಬ ಪದವೇ ನಮ್ಮ ಡಿಕ್ಷನರಿಯಲ್ಲಿ ಇಲ್ಲ. ಕೆಲವರು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಮ್ಮ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-basavaraj-bommai-on-assembly-ticket-rumours-haveri-gvd/articleshow-bs2v8ap"/>
        </item>
        <item>
            <title><![CDATA[SIR ಮೂಲಕ ಮತದಾರರ ಹಕ್ಕು ಕಸಿಯಲು ಅವಕಾಶ ನೀಡಲ್ಲ: ಸಲೀಂ ಅಹ್ಮದ್ ಎಚ್ಚರಿಕೆ]]></title>
            <link>https://kannada.asianetnews.com/karnataka-districts/saleem-ahmed-slams-election-commission-over-voter-list-deletion-gvd/articleshow-cklg5tk</link>
            <guid isPermaLink="true">https://kannada.asianetnews.com/karnataka-districts/saleem-ahmed-slams-election-commission-over-voter-list-deletion-gvd/articleshow-cklg5tk</guid>
            <pubDate>Sun, 14 Jun 2026 22:48:39 +0530</pubDate>
            <description><![CDATA[&lt;p&gt;SIR: ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮೂಲಕ ಜನರ ಮೂಲಭೂತ ಹಕ್ಕು ಕಸಿಯುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ಸಲೀಂ ಅಹ್ಮದ್ ಎಚ್ಚರಿಕೆ ನೀಡಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g2m1ancat090bwxmywwna2y0,imgname-saleem-ahmed.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜೂ.14): &lt;/strong&gt;ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಮೂಲಕ ಜನರ ಮೂಲಭೂತ ಹಕ್ಕು ಕಸಿಯುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಅಗತ್ಯವಿದ್ದರೆ ಬೀದಿಗಿಳಿದು ಹೋರಾಟ ನಡೆಸಲು ಸಿದ್ಧವಿದ್ದೇವೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಎಚ್ಚರಿಕೆ ನೀಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಮತದಾರರನ್ನು ಸೇರಿಸುವುದನ್ನು ಬಿಟ್ಟು ತೆಗೆಯುವ ಕೆಲಸ ಮಾಡುತ್ತಿದೆ. ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.&lt;/p&gt;&lt;p&gt;ಈ ಹಿಂದೆ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೊಸ ಮತದಾರರನ್ನು ಸೇರ್ಪಡೆ ಮಾಡುವ ಕೆಲಸ ಮಾಡುತ್ತಿತ್ತು. ಆದರೆ ಈಗ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕೆಲಸ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಒತ್ತಡದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಿಹಾರ ಹಾಗೂ ಪಶ್ಚಿಮ ಬಂಗಾಳ ಚುನಾವಣೆ ವೇಳೆ ಅನುಸರಿಸಿದ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ ಕಾಂಗ್ರೆಸ್&zwnj;ನ ಬಿಎಲ್&zwnj;ಎಗಳು ಮತ್ತು ಕಾರ್ಯಕರ್ತರು ಅದಕ್ಕೆ ಅವಕಾಶ ನೀಡುವುದಿಲ್ಲ. ಬಿಹಾರ, ಪಶ್ಚಿಮ ಬಂಗಾಳದಂತೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.&lt;/p&gt;&lt;p&gt;ಹಿಂದುಳಿದವರು, ಅಲ್ಪಸಂಖ್ಯಾತರು, ಎಸ್&zwnj;ಸಿ-ಎಸ್&zwnj;ಟಿಗಳ ಮತದಾನದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ ಎಸ್&zwnj;ಐಆರ್&zwnj; ಮೂಲಕ ನಡೆಯುತ್ತಿದೆ. ಮೋದಿ, ಅಮಿತ್ ಶಾ ಅವರ ನೇರ ಮಾರ್ಗದರ್ಶನದಲ್ಲಿ ಆಯೋಗ ಈ ರೀತಿಯ ಕೆಲಸ ಮಾಡುತ್ತಿದೆ. ಆದರೆ ಈ ಷಡ್ಯಂತ್ರ ರಾಜ್ಯದಲ್ಲಿ ನಡೆಯಲು ನಾವು ಬಿಡುವುದಿಲ್ಲ. ನಾವು ಈಗಾಗಲೇ ಎಚ್ಚೆತ್ತುಕೊಂಡಿದ್ದೇವೆ ಎಂದು ಹೇಳಿದರು.&lt;/p&gt;&lt;p&gt;ಯುವಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಡಿ.ಕೆ. ಶಿವಕುಮಾರ ಸಿಎಂ ಆದ ಮೊದಲ ಸಂಪುಟದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೊಳಿಸಿದ್ದಾರೆ. ಭಾರತ ಜೋಡೋ ಯುವ ಸಂಘಗಳಿಗೆ ಅನುದಾನ ಸೇರಿದಂತೆ 10 ಸಾವಿರ ಯುವ ಸಂಘಗಳ ಸ್ಥಾಪನೆಗೆ ಉತ್ತೇಜನ ನೀಡಲಾಗಿದೆ. ಈಚೆಗೆ ನಡೆದ ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಶಿವಕುಮಾರ್ ಪಾಲ್ಗೊಂಡು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೇಳಿದ್ದಾರೆ. ಕೇಂದ್ರ ಸರ್ಕಾರದ ಮುಂದೆ 18 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಎಸ್&zwnj;ಐಆರ್&zwnj;ಗೆ ದಾಖಲೆ ಸಿದ್ಧ ಮಾಡಿಟ್ಟುಕೊಳ್ಳಿ&lt;/strong&gt;&lt;/h2&gt;&lt;p&gt;ವಿಧಾನಪರಿಷತ್ ಸದಸ್ಯ, ಎಸ್ಐಆರ್&zwnj; ಉಸ್ತುವಾರಿ ಎಸ್.ಎಫ್. ಜಕ್ಕಪ್ಪನವರ ಮಾತನಾಡಿ, ಬೆಳಗಾವಿ ವಿಭಾಗದ 65 ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ತಮ್ಮ ಮೇಲೆ ವಹಿಸಲಾಗಿದ್ದು, ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಕಾನೂನಿನ ವ್ಯಾಪ್ತಿಯಲ್ಲೇ ಕಾಂಗ್ರೆಸ್ ಕಾರ್ಯನಿರ್ವಹಿಸುತ್ತಿದ್ದರೂ, ಮತದಾನದಂತಹ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಕೆಲ ಸಮುದಾಯಗಳ ಮತವನ್ನು ಕಸಿದುಕೊಳ್ಳುವ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಆದ್ದರಿಂದ ಮತದಾರರು ಪಾಸ್&zwnj;ಪೋರ್ಟ್, ಆಸ್ತಿ ದಾಖಲೆ, ರಹವಾಸಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಜನ್ಮದಿನಾಂಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಬಿಎಲ್&zwnj;ಒಗಳು ಮನೆಗಳಿಗೆ ಭೇಟಿ ನೀಡಿದಾಗ ನಮೂನೆಗಳನ್ನು ಭರ್ತಿ ಮಾಡದಿದ್ದರೆ ಮತದಾನ ಹಕ್ಕಿನಿಂದ ವಂಚಿತರಾಗುತ್ತಾರೆ. ಇದು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಮನವಿ ಮಾಡಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/saleem-ahmed-slams-election-commission-over-voter-list-deletion-gvd/articleshow-cklg5tk"/>
        </item>
        <item>
            <title><![CDATA[ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ: ಶಾಸಕರಿಂದಲೇ ವೆಚ್ಚ]]></title>
            <link>https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy</link>
            <guid isPermaLink="true">https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy</guid>
            <pubDate>Sat, 04 Jul 2026 07:20:26 +0530</pubDate>
            <description><![CDATA[ಹಾವೇರಿ ಜಿಲ್ಲೆಯಲ್ಲಿನ ಮಳೆ ಕೊರತೆ ನೀಗಿಸಲು ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ಜುಲೈ 7 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆಗೆ ಅಮೆರಿಕದಿಂದ ವಿಶೇಷ ವಿಮಾನ ತರಿಸಲಾಗುತ್ತಿದ್ದು, ಇದರ ಸಂಪೂರ್ಣ ವೆಚ್ಚವನ್ನು ಜಿಲ್ಲೆಯ ಶಾಸಕರೇ ಭರಿಸಲಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwnd1f5rbvzzvntcp6vb4bjg,imgname-cloud-seeding-1783129750712.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ಮಳೆ ಕೊರತೆಯ ಹಿನ್ನೆಲೆಯಲ್ಲಿ ರೈತರ ನೆರವಿಗೆ ಧಾವಿಸಿರುವ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಜಿಲ್ಲಾದ್ಯಂತ ಮೋಡ ಬಿತ್ತನೆ ಮಾಡಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜು.7ರಿಂದ ಸತತ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆಗೆ ಕೇಂದ್ರ ಸರ್ಕಾರದಿಂದ ಪರವಾನಗಿ ಕೇಳಲಾಗಿತ್ತು. ಇಂದಷ್ಟೇ ಅವಕಾಶ ನೀಡಿರುವ ಮಾಹಿತಿ ಬಂದಿದೆ.&lt;/p&gt;&lt;h2&gt;&lt;strong&gt;ಪೈಲಟ್&zwnj;ಗಳಿಗೆ ವಿಶೇಷ ತರಬೇತಿ&lt;/strong&gt;&lt;/h2&gt;&lt;p&gt;ಮೋಡ ಬಿತ್ತನೆ ಕಾರ್ಯಕ್ಕಾಗಿಯೇ ಅಮೆರಿಕದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ಅತ್ಯಾಧುನಿಕ ವಿಮಾನವನ್ನು ಬಳಸಲಾಗುತ್ತಿದ್ದು, ಸೋಮವಾರವೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದೆ. ಈ ಕಾರ್ಯಾಚರಣೆಗಾಗಿ ಈಗಾಗಲೇ ಪೈಲಟ್&zwnj;ಗಳಿಗೆ ವಿಶೇಷ ತರಬೇತಿಯನ್ನು ಸಹ ನೀಡಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Haveri: ಕ್ಷುಲ್ಲಕ ಜಗಳಕ್ಕೆ ಬಲಿಯಾದ ಬೀದಿ ಬದಿ ವ್ಯಾಪಾರಿ! ಇದು ಒಂದು ಮೊಟ್ಟೆಯ ಕಥೆ!&lt;/strong&gt;&lt;/p&gt;&lt;p&gt;ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ಟೆಂಡರ್&zwnj; ಕರೆಯಬೇಕಿದೆ. ಅದಕ್ಕೆ ಸಮಯ ತಗಲುವುದರಿಂದ ಜಿಲ್ಲೆಯ 6 ಶಾಸಕರೇ ಸೇರಿ 8 ತಾಲೂಕುಗಳಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ಮಾಡುತ್ತೇವೆ. ಒಂದು ತಾಸಿನ ಕಾರ್ಯಾಚರಣೆಗೆ ₹15 ಲಕ್ಷ ವೆಚ್ಚವಾಗಲಿದೆ. ಈ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುತ್ತೇವೆ. ಜಿಲ್ಲೆಯ ರೈತರು ಮಳೆ ಕೊರತೆಯಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಈ ನಿರ್ಧಾರ ಮಾಡಲಾಗಿದೆ. ಸೋಮವಾರ ವಿಮಾನ ಬರಲಿದ್ದು, ಆಕಾಶದಲ್ಲಿ ಮೋಡಗಳ ಲಭ್ಯತೆಯನ್ನು ಪರಿಶೀಲಿಸಿ, ಜು. 7ರಂದಲೇ ಮೋಡ ಬಿತ್ತನೆ ಆರಂಭಿಸಲಾಗುವುದು. ಮಳೆ ತರುವ ಮೋಡಗಳು ಸೂಕ್ತ ಪ್ರಮಾಣದಲ್ಲಿದ್ದಾಗ ಮಾತ್ರ ಬಿತ್ತನೆ ಪ್ರಕ್ರಿಯೆ ಯಶಸ್ವಿಯಾಗುವುದರಿಂದ, ಹವಾಮಾನದ ಮೇಲೆ ನಿಗಾ ಇಟ್ಟು ಕಾರ್ಯಾಚರಣೆ ನಡೆಸಲು ತಂಡ ಸಜ್ಜಾಗಿದೆ ಎಂದು ಪ್ರಕಾಶ ಕೋಳಿವಾಡ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೈಕೊಟ್ಟ ಮಳೆ: 11 ಎಕ್ರೆ ಗೋವಿನಜೋಳದ ಬೆಳೆ ಟ್ರ&zwj;್ಯಾಕ್ಟರ್&zwnj;ನಿಂದ ನಾಶ ಮಾಡಿದ ಹಾವೇರಿ ರೈತ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy"/>
        </item>
        <item>
            <title><![CDATA[Satish Jarkiholi: ಸಿದ್ದರಾಮಯ್ಯ ಜೊತೆ ಅಸಮಾಧಾನ, ರಾಜ್ಯದ ಸಮಸ್ಯೆ ಅಲ್ಲ, ನಮ್ಮ ಸಮಸ್ಯೆ- ಜಾರಕಿಹೊಳಿ]]></title>
            <link>https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg</link>
            <guid isPermaLink="true">https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg</guid>
            <pubDate>Wed, 15 Jul 2026 06:45:32 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxhn4mm6d3jm1a1mbvvgdknm,imgname-----------------------2026-07-15t063911.881-1784077767302.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜು.15): &lt;/strong&gt;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.&lt;/p&gt;&lt;h2&gt;ರಾಜ್ಯದ ಸಮಸ್ಯೆ ಅಲ್ಲ, ನಮ್ಮ ನಡುವಿನ ಸಮಸ್ಯೆ&lt;/h2&gt;&lt;p&gt;ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಜೊತೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದೇ ಅದು ರಾಜ್ಯದ ಸಮಸ್ಯೆ ಅಲ್ಲ, ನಮ್ಮ ನಮ್ಮ ನಡುವಿನ ಸಮಸ್ಯೆ ಎಂದಷ್ಟೇ ಚುಟುಕಾಗಿ ಉತ್ತರಿಸಿದರು. ಭಿನ್ನಾಭಿಪ್ರಾಯ, ಅಸಮಾಧಾನ ಇಲ್ಲ ಎಂದೇನೂ ಹೇಳಲಿಲ್ಲ.&lt;/p&gt;&lt;h3&gt;ಒತ್ತಾಯದಿಂದ ಬಿಡದಿ ಜಮೀನು ಪಡೆಯುತ್ತಿಲ್ಲ:&amp;nbsp;&lt;/h3&gt;&lt;p&gt;ಬಿಡದಿ ಭಾಗದ ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ ಎಂದು ಸಚಿವ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ. ಜಮೀನು ನೀಡುವುದಿಲ್ಲ ಎಂದು ಹೇಳಿದವರ ಜಮೀನನ್ನು ಸರ್ಕಾರ ಪಡೆದುಕೊಳ್ಳುವುದಿಲ್ಲ. ಜಮೀನು ನೀಡಿದವರ ಜಾಗದ ಸರ್ವೆ ಕಾರ್ಯಕ್ಕಾಗಿ ಅಧಿಕಾರಿಗಳು ನಿನ್ನೆ ಕೂಡ ಭೇಟಿ ನೀಡಿದ್ದರು ಎಂದು ಹೇಳಿದರು.&lt;/p&gt;&lt;p&gt;ರೈತರ ಮೇಲೆ ಯಾವ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಸರ್ಕಾರದಿಂದ ರೈತರ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ. ಅಲ್ಲಿ ನಡೆದಿರುವ ಘಟನೆಯ ಸಂಪೂರ್ಣ ಮಾಹಿತಿ ನನಗೆ ಇಲ್ಲ. ಆದರೆ ರೈತರ ಮೇಲೆ ಯಾವುದೇ ಒತ್ತಡ ಅಥವಾ ಬಲವಂತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;&lt;p&gt;ಆರ್&zwnj;ಎಸ್&zwnj;ಎಸ್ ನೋಂದಣಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆರ್&zwnj;ಎಸ್&zwnj;ಎಸ್ ನೋಂದಣಿ ಕುರಿತ ವಿಚಾರವು ಗೃಹ ಸಚಿವರ ವ್ಯಾಪ್ತಿಗೆ ಸಂಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಹಿಂದ ಸಂಘಟನೆ ಈ ಹಿಂದೆ ಯಾವುದೋ ಹೆಸರಿನಲ್ಲಿ ನೋಂದಣಿಯಾಗಿದೆ. ಆದರೆ ಈ ವಿಚಾರವು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದದ್ದಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg"/>
        </item>
        <item>
            <title><![CDATA[ಗಂಟೆಗೆ 15 ಲಕ್ಷ ರೂ. ವೆಚ್ಚ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ, ರೈತರಿಗೆ ನೆರವು]]></title>
            <link>https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en</link>
            <guid isPermaLink="true">https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en</guid>
            <pubDate>Tue, 07 Jul 2026 08:54:50 +0530</pubDate>
            <description><![CDATA[ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwx8vkq1aj9cwrphw72htqxm,imgname-cloud-seeding--5--1783393799905.jpg" type="image/jpeg" height="390" width="690"/>
            <content:encoded><![CDATA[ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.&lt;img&gt;&lt;p&gt;ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಮೋಡ ಬಿತ್ತನೆ ಅವಶ್ಯವಿದ್ದು ಇದು ಸರ್ಕಾರದಿಂದಲೇ ಈ ಕಾರ್ಯವಾಗಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಲೋಕೋಪಯೋಗಿ ಸಚಿವ, ಧಾರವಾಡ, ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆ ಉಸ್ತುವಾರಿ ಮಂತ್ರಿ ಸತೀಶ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಭಾಗದಲ್ಲಿ ಮೋಡ ಬಿತ್ತನೆಯ ವಿಶೇಷ ವಿಮಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.&lt;/p&gt;&lt;img&gt;&lt;p&gt;ಹಾವೇರಿಯಲ್ಲಿ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಈ ಹಿಂದೆ ಸಭೆ ನಡೆಸಿ, ಮೋಡ ಬಿತ್ತನೆ ಕುರಿತು ಚರ್ಚಿಸಲಾಗಿತ್ತು. ಮುಂದುವರಿದ ಭಾಗವಾಗಿ ವಿಶೇಷ ವಿಮಾನದ ಮೂಲಕ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದು ಸರ್ಕಾರದ ಕಾರ್ಯಕ್ರಮ ಆಗಬೇಕು ಎನ್ನುವುದು ನಮ್ಮ ಆಶಯ. ಮಳೆ ಕೊರತೆಯಿಂದ ರೈತರಿಗೆ ಉಂಟಾಗಿರುವ ಸಮಸ್ಯೆ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದರು.&lt;/p&gt;&lt;img&gt;&lt;p&gt;ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಮುಂಗಾರು ಬೆಳೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿಯ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆ ವರದಿ ಬಂದ ಬಳಿಕ ಸರ್ಕಾರ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. ಬ್ಯಾಂಕ್&zwnj;ಗಳು ಮತ್ತು ವಿಮಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.&lt;/p&gt;&lt;img&gt;&lt;p&gt;ಮೋಡ ಬಿತ್ತನೆ ಕಾರ್ಯಕ್ರಮದ ನೇತೃತ್ವ ವಹಿಸಿದ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ರೈತರ ಒಳಿತಿಗಾಗಿ ಹಾವೇರಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಸೇರಿ ಈ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ 3 ದಿನ ನಿರಂತರ ಮೋಡ ಬಿತ್ತನೆ ನಡೆಯಲಿದೆ. ವಿಶೇಷ ವಿಮಾನ ಒಂದು ತಿಂಗಳು ಹುಬ್ಬಳ್ಳಿಯಲ್ಲೇ ಇರಲಿದ್ದು, ತೇವಾಂಶ ಸಿಕ್ಕಾಗ ವಿಜ್ಞಾನಿಗಳು ಹೇಳಿದ ಸಮಯಕ್ಕೆ ಮೋಡ ಬಿತ್ತನೆ ಮಾಡಲಾಗುವುದು. ಒಂದು ತಾಸಿಗೆ ₹15 ಲಕ್ಷ ವೆಚ್ಚವಾಗುತ್ತದೆ ಎಂದು ತಿಳಿಸಿದರು..&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕ ಭಾಗದಲ್ಲಿ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬರದ ಛಾಯೆ ಆವರಿಸುತ್ತಿದ್ದರೂ ಸರ್ಕಾರ ಮೋಡ ಬಿತ್ತನೆಗೆ ಏಕೆ ವಿಳಂಬ ಮಾಡುತ್ತಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಪ್ರಶ್ನಿಸಿದರು.&lt;/p&gt;&lt;p&gt;ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮೋಡಗಳು ಕಾಣಿಸಿಕೊಳ್ಳುತ್ತಿದ್ದು, ಮೋಡ ಬಿತ್ತನೆಗೆ ಇದು ಸೂಕ್ತ ಸಮಯವಾಗಿದೆ. ಸರ್ಕಾರ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಅಧಿಕಾರಿಗಳ ಮಾತು ಕೇಳದೆ ವಿಜ್ಞಾನಿಗಳ ಮಾತು ಕೇಳಬೇಕು. ವಿಳಂಬ ಮಾಡದೆ ತಕ್ಷಣ ಮೋಡ ಬಿತ್ತನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.&lt;/p&gt;&lt;img&gt;&lt;p&gt;ತಂತ್ರಜ್ಞಾನಗಳು ಸಾಕಷ್ಟು ಆವಿಷ್ಕಾರ ಆಗಿರುವುದರಿಂದ ಮೋಡ ಬಿತ್ತನೆ ಯಶಸ್ವಿಯಾಗುತ್ತಿದೆ. 2001 ಮತ್ತು 2017ರಲ್ಲಿ ಇಲ್ಲಿಂದಲೇ ಕಾರ್ಯಾಚರಣೆ ನಡೆಸಿದಾಗ, ಹುಬ್ಬಳ್ಳಿ ಸೇರಿ ಹಾವೇರಿ, ಗದಗ ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ರಕ್ಷಣಾ ಇಲಾಖೆ ವಿಮಾನಗಳು ಖಾಲಿ ನಿಂತಿರುತ್ತವೆ. ಮೋಡ ಬಿತ್ತನೆಗೆ ಅವುಗಳನ್ನು ಬಳಸಿಕೊಂಡು ರೈತರ ನೆರವಿಗೆ ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.&amp;nbsp;&lt;/p&gt;&lt;img&gt;&lt;p&gt;ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಹಾವೇರಿ ಭಾಗದಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಸರ್ಕಾರ ಅನುಮತಿ&zwnj; ನೀಡದಿದ್ದರೆ, ಧಾರವಾಡ, ಗದಗ ಭಾಗದ&zwnj; ಶಾಸಕರ ಸಹಕಾರದಲ್ಲಿ ನಾವೇ ಈ ಭಾಗದಲ್ಲೂ ಮೋಡ ಬಿತ್ತನೆ ಮಾಡುತ್ತೇವೆ ಎಂದರು.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಧಾರವಾಡ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ನಡೆಸುವಂತೆ ಮನವಿ ಮಾಡಲಾಗಿದೆ. ಸರ್ಕಾರ ಈ ಕುರಿತು ಕ್ರಮಕೈಗೊಳ್ಳದಿದ್ದರೆ ಧಾರವಾಡ ಹಾಗೂ ಗದಗ ಜಿಲ್ಲೆಯ ಶಾಸಕರು ಒಗ್ಗೂಡಿ ಸ್ವಂತ ಪ್ರಯತ್ನದಿಂದ ಮೋಡ ಬಿತ್ತನೆ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು. ಮೋಡ ಬಿತ್ತನೆಗೆ ಬಳಸುವ ವಿಮಾನ ಒಂದು ತಿಂಗಳ ಕಾಲ ಈ ಭಾಗದಲ್ಲೇ ಲಭ್ಯವಿರುವುದರಿಂದ ಅಗತ್ಯವಿದ್ದರೆ ಅದರ ಪ್ರಯೋಜನ ಪಡೆಯಲು ಸಿದ್ಧರಾಗಿದ್ದೇವೆ ಎಂದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en"/>
        </item>
        <item>
            <title><![CDATA[Haveri: ಮಕ್ಕಳನ್ನೇ ಜೋಡೆತ್ತು ಮಾಡಿ ಎಡೆಕುಂಟೆ ಹೊಡೆದ ಅಪ್ಪ; ಎತ್ತುಗಳ ಖರೀದಿಗಿಲ್ಲ ಹಣ]]></title>
            <link>https://kannada.asianetnews.com/karnataka-districts/haveri-farmer-uses-two-children-as-laborers-to-pull-weeds-from-cabbage-crop-mrq/articleshow-g9qt2nv</link>
            <guid isPermaLink="true">https://kannada.asianetnews.com/karnataka-districts/haveri-farmer-uses-two-children-as-laborers-to-pull-weeds-from-cabbage-crop-mrq/articleshow-g9qt2nv</guid>
            <pubDate>Sun, 14 Jun 2026 07:54:35 +0530</pubDate>
            <description><![CDATA[ಹಾವೇರಿ ಜಿಲ್ಲೆಯ ರೈತ ಶಂಕರಪ್ಪ ಲಮಾಣಿ, ಎತ್ತುಗಳನ್ನು ಖರೀದಿಸಲು ಹಣವಿಲ್ಲದೆ, ತಮ್ಮ ಎಲೆಕೋಸು ಬೆಳೆಯಲ್ಲಿನ ಕಳೆ ತೆಗೆಯಲು ಇಬ್ಬರು ಮಕ್ಕಳನ್ನೇ ಜೋಡೆತ್ತುಗಳಂತೆ ಬಳಸಿದ್ದಾರೆ. ಈ ಘಟನೆಯು ಸಾಲ ಮಾಡಿ ಕೃಷಿ ಮಾಡುವ ರೈತರ ಸಂಕಷ್ಟ ಮತ್ತು ಅಸಹಾಯಕ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv1yv2bf0s7dmqdbwba241jd,imgname-haveri-1781403584879.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಎಲೆಕೋಸು ಬೆಳೆಯ ಮಧ್ಯೆ ಬೆಳೆದ ಕಳೆ ನಾಶಮಾಡಲು ಹೊಲದ ಮಧ್ಯೆ ಇಬ್ಬರು ಮಕ್ಕಳು ಜೋಡೆತ್ತುಗಳಂತೆ ನೊಗ ಹೊತ್ತು ಸಾಗುತ್ತಿದ್ದರೆ, ಅಪ್ಪ ಎಡೆಕುಂಟೆ ಹಿಡಿದು ಅವರ ಹಿಂದೆ ಸಾಗುತ್ತಾನೆ. ಈ ದೃಶ್ಯ ನೋಡಿದರೆ ಇಂದಿಗೂ ನಮ್ಮ ರೈತರ ಪರಿಸ್ಥಿತಿ ಹೇಗಿದೆ ಎಂಬುದು ಅರ್ಥವಾಗುತ್ತದೆ.&lt;/p&gt;&lt;p&gt;ರಾಣಿಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ರೈತ ಶಂಕರಪ್ಪ ಲಮಾಣಿ ಹಾಗೂ ಅವರ ಇಬ್ಬರು ಮಕ್ಕಳು ತಾವೇ ಎಡೆಕುಂಟೆ ಕಟ್ಟಿ ಎಳೆದಿರುವ ಘಟನೆ ಬೆಳಕಿಗೆ ಬಂದಿದೆ.&lt;/p&gt;&lt;h2&gt;&lt;strong&gt;ಎಲೆಕೋಸು ಬೆಳೆದಿರುವ ರೈತ&lt;/strong&gt;&lt;/h2&gt;&lt;p&gt;3 ಎಕರೆ 16 ಗುಂಟೆ ಜಮೀನಿನಲ್ಲಿ ಎಲೆಕೋಸು ಬೆಳೆದಿರುವ ಅವರು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ಸಾಲ ಮಾಡಿ ಕೃಷಿ ಮಾಡಿದ್ದಾರೆ. ಬೀಜ, ಗೊಬ್ಬರ, ಔಷಧಿ, ಕೂಲಿ ಸೇರಿದಂತೆ ಲಕ್ಷಾಂತರ ರುಪಾಯಿ ವೆಚ್ಚ ಮಾಡಿದ್ದಾರೆ. ಆದರೆ ಕೆಲ ದಿನಗಳ ಹಿಂದೆ ಸುರಿದ ಪೂರ್ವ ಮುಂಗಾರು ಮಳೆಯಿಂದಾಗಿ ಎಲೆಕೋಸು ಬೆಳೆ ಮಧ್ಯೆ ಕಳೆ ವ್ಯಾಪಕವಾಗಿ ಬೆಳೆದಿದೆ. ಕಳೆ ನಾಶ ಮಾಡದೇ ಬಿಟ್ಟರೆ ಬೆಳೆ ಕುಂಠಿತವಾಗುತ್ತದೆ. ಹೀಗಾಗಿ ಕಳೆ ನಾಶ ಮಾಡುವುದು ರೈತನಿಗೆ ಅನಿವಾರ್ಯವಾಗಿದೆ. ಆದರೆ ಕಳೆ ನಾಶ ಮಾಡಲು ಎತ್ತುಗಳನ್ನು ಖರೀದಿಸಬೇಕೆಂದರೆ ಲಕ್ಷಾಂತರ ರು. ಖರ್ಚು ಮಾಡಬೇಕು. ಯಂತ್ರ ಬಾಡಿಗೆಯೂ ಅಧಿಕವಾಗಿದೆ. ಆದ್ದರಿಂದ ರೈತ ಶಂಕರಪ್ಪ ಲಮಾಣಿ ತನ್ನ ಇಬ್ಬರು ಮಕ್ಕಳೊಂದಿಗೆ ಸೇರಿ ಎಡೆಕುಂಟೆ ಹೊಡೆದಿದ್ದಾರೆ.&lt;/p&gt;&lt;p&gt;ಮಕ್ಕಳಾದ ನಿಂಗರಾಜ್ ಮತ್ತು ಪ್ರವೀಣ್ ಜೋಡೆತ್ತುಗಳಂತೆ ನೊಗ ಎಳೆದರೆ, ಅಪ್ಪ ಎಡೆಕುಂಟೆ ಹಿಡಿದು ಮೂರೂವರೆ ಎಕರೆ ಹೊಲದಲ್ಲಿ ಬೆಳೆದಿದ್ದ ಕಳೆ ನಾಶ ಮಾಡಿದ್ದಾರೆ. ಇನ್ನು ಕೇವಲ 20 ದಿನದ ಎಲೆಕೋಸು ಬೆಳೆಯಿದೆ. ಈ ಬೆಳೆ ಮಾರುಕಟ್ಟೆಗೆ ತಲುಪುವವರೆಗೆ ಕನಿಷ್ಠ ಮೂರು ಬಾರಿ ಕಳೆ ನಾಶ ಮಾಡಲೇಬೇಕಿದೆ. ಒಂದು ಬಾರಿ ಕಳೆ ನಾಶ ಮಾಡಲು ಮೂರು ಜನ ಸೇರಿ ನಾಲ್ಕೈದು ದಿನಗಳ ಆಗುತ್ತದೆ. ಅಷ್ಟೊಂದು ಶ್ರಮ ಹಾಕಿ ಈ ಕುಟುಂಬ ಬೆಳೆ ತೆಗೆಯುತ್ತಿರುವುದು ಕಂಡು ಅನೇಕರು ಮರುಗಿದ್ದಾರೆ.&lt;/p&gt;&lt;p&gt;ನಮ್ಮಲ್ಲಿ ಎತ್ತು ಖರೀದಿಸಲು ಹಣವಿಲ್ಲ. ಬಾಡಿಗೆ ಎತ್ತು, ಬಾಡಿಗೆ ಟ್ರ್ಯಾಕ್ಟರ್&zwnj; ಪಡೆದರೂ ನೀಡುವುದು ಕಷ್ಟ. ಆದರೆ ಬೆಳೆ ಉಳಿಸಲೇಬೇಕು. ಹೀಗಾಗಿ ಇಬ್ಬರು ಮಕ್ಕಳೊಂದಿಗೆ ಸೇರಿ ಎಡೆಕುಂಟೆ ಹೊಡೆದಿದ್ದೇನೆ. ನಮ್ಮ ರೈತನ ಪರಿಸ್ಥಿತಿ ಯಾವಾಗಲೂ ಹೀಗೆಯೇ. ಯಾರ ಮುಂದೆ ಕೈಚಾಚಿ ನಿಲ್ಲುವುದು ನಮ್ಮಿಂದ ಸಾಧ್ಯವಿಲ್ಲ ಎಂದು ಎಲೆಕೋಸು ಬೆಳೆದ ರೈತ ಶಂಕರಪ್ಪ ಲಮಾಣಿ ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-farmer-uses-two-children-as-laborers-to-pull-weeds-from-cabbage-crop-mrq/articleshow-g9qt2nv"/>
        </item>
        <item>
            <title><![CDATA[Haveri: ಯುವಕರಿಂದ ಉಮ್ಲಿಂಗ್ ಲಾ ಪಾಸ್‌ಗೆ ಬೈಕ್ ಸವಾರಿ: 47 ದಿನಗಳ ಅದ್ಭುತ ಯಾತ್ರೆ]]></title>
            <link>https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2</link>
            <guid isPermaLink="true">https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2</guid>
            <pubDate>Mon, 06 Jul 2026 06:12:59 +0530</pubDate>
            <description><![CDATA[ರಾಣಿಬೆನ್ನೂರಿನ ಶ್ಯಾಮಸುಂದರ ದೈವಜ್ಞ ಮತ್ತು ಅವರ ಸ್ನೇಹಿತರು 47 ದಿನಗಳ ಮೋಟಾರ್ ಸೈಕಲ್ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಯಾತ್ರೆಯು ಉತ್ತರಾಖಂಡದ ಪಂಚ ಕೇದಾರದಿಂದ ಲಡಾಖ್&zwnj;ನ ಉಮ್ಲಿಂಗ್ ಲಾ ಪಾಸ್&zwnj;ವರೆಗೆ ಸಾಗಿ, ಆಧ್ಯಾತ್ಮಿಕ, ದೇಶಭಕ್ತಿ ಮತ್ತು ಸಾಹಸಮಯ ಅನುಭವಗಳನ್ನು ನೀಡಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kwtdxzw8b2nrrkzdgcwas9h2,imgname-ranibennur-1783298457480.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಸವರಾಜ ಸರೂರ&amp;nbsp;&lt;/strong&gt;&lt;/p&gt;&lt;p&gt;&lt;strong&gt;ಹಾವೇರಿ: &lt;/strong&gt;ರಾಣಿಬೆನ್ನೂರು ನಗರದ ಶಾಮಸುಂದರ ದೈವಜ್ಞ ತನ್ನ ಸ್ನೇಹಿತರ ಜತೆ ಇತ್ತೀಚಿಗೆ ಉತ್ತರ ಭಾರತದಾದ್ಯಂತ 47 ದಿನಗಳ ಮೋಟಾರ್ ಸೈಕಲ್ ಪ್ರವಾಸವನ್ನು ಯಶಸ್ವಿಯಾಗಿ ಪೂರೈಸಿ ಸಾಧನೆ ಮೆರೆದಿದ್ದಾರೆ.&lt;/p&gt;&lt;p&gt;ಈ ತಂಡವು ಉತ್ತರಾಖಂಡದ ಪಂಚ ಕೇದಾರ ದೇವಾಲಯಗಳಿಂದ ಲಡಾಖ್&zwnj;ನ ಉಮ್ಲಿಂಗ್ ಲಾ ಕಣಿವೆ ವರೆಗಿನ ಮಾರ್ಗಗಳಲ್ಲಿ ಸಾವಿರಾರು ಕಿಲೋಮೀಟರ್&zwnj;ಗಳಷ್ಟು ಪ್ರಯಾಣಿಸಿತು. ಈ ಯಾತ್ರೆಯ ಭಾಗವಾಗಿ, ಅವರು ಹರಿದ್ವಾರಕ್ಕೆ ಹೋಗುವ ಮಾರ್ಗಮಧ್ಯೆ 188 ಕಿ.ಮೀ. ಕಠಿಣ ಪಾದಯಾತ್ರೆಯನ್ನು ಕೈಗೊಂಡರು. ಇದು ಅವರ ಸಹಿಷ್ಣುತೆ ಮತ್ತು ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ.&amp;nbsp;&lt;/p&gt;&lt;p&gt;ರೈಡರ್ಸ್ ಶ್ಯಾಮಸುಂದರ ದೈವಜ್ಞ (ರಾಣಿಬೆನ್ನೂರು), ಬಾಹುಬಲಿ ಹುಕ್ಕೇರಿ, ಶುಭಂ ಬಡವೆ (ಚಿಕ್ಕೋಡಿ), ಸೋಮನಾಥ ಸುತಾರ್, ವಿವೇಕ ಪಾಟೀಲ, ಆದರ್ಶ ಪಾಟೀಲ (ಕುರಂದವಾಡ, ಮಹಾರಾಷ್ಟ್ರ) ಒಳಗೊಂಡ ತಂಡವು ಪ್ರಕೃತಿಯನ್ನು ಅನುಭವಿಸಲು, ಸವಾಲಿನ ಭೂಪ್ರದೇಶವನ್ನು ಸುತ್ತಾಡಲು ಮತ್ತು ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆಯ ಶಕ್ತಿಯನ್ನು ವೀಕ್ಷಿಸಲು ತೆರಳಿದರು.&lt;/p&gt;&lt;p&gt;ಪತ್ರಿಕೆಯೊಂದಿಗೆ ತನ್ನ ಪ್ರವಾಸದ ಅನುಭವವನ್ನು ಹಂಚಿಕೊಂಡ ಶ್ಯಾಮಸುಂದರ ಅವರು, ಮೇ 11ರಂದು ಆರಂಭವಾದ ನಮ್ಮ ಪ್ರಯಾಣವು ಕೇವಲ ವಿವಿಧ ರಾಜ್ಯಗಳ ಮೂಲಕ ಸಾಗುವ ರಸ್ತೆ ಪ್ರಯಾಣಕ್ಕಿಂತ ಮಿಗಿಲಾಗಿದ್ದಾಗಿತ್ತು. ಇದು ಭಗವಂತ ಶಿವನನ್ನು ಅರಸುವ ಆಧ್ಯಾತ್ಮಿಕ ಅನ್ವೇಷಣೆ, ಪ್ರಕೃತಿಯೊಂದಿಗಿನ ಗಾಢವಾದ ವೈಯಕ್ತಿಕ ನಂಟು ಹಾಗೂ ಸೈನಿಕರ ತ್ಯಾಗವನ್ನು ಕಣ್ತುಂಬಿಕೊಂಡ ದೇಶಭಕ್ತಿಯ ಅನುಭವವಾಗಿತ್ತು. ಇದು ನಮಗೆ ಧೈರ್ಯ ಮತ್ತು ಆತ್ಮವಿಶ್ವಾಸದಂತಹ ಜೀವನ ಪಾಠಗಳನ್ನೂ ಕಲಿಸಿತು. ಇಂತಹ ಪ್ರಯಾಣಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಆತ್ಮವಿಶ್ವಾಸವನ್ನು ರೂಪಿಸುತ್ತವೆ.&lt;/p&gt;&lt;h2&gt;&lt;strong&gt;ಸುಮಾರು 188 ಕಿಮೀ ಚಾರಣ ಮತ್ತು 400 ಕಿಮೀ ಚಾಲನೆ&lt;/strong&gt;&lt;/h2&gt;&lt;p&gt;&amp;nbsp;ಘರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ, ತುಂಗನಾಥ, ರುದ್ರನಾಥ, ಮಧ್ಯ ಮಹೇಶ್ವರ ಮತ್ತು ಕಪಿಲೇಶ್ವರವನ್ನು ಒಳಗೊಂಡ ಪಂಚ ಕೇದಾರ ಯಾತ್ರೆಯು ಸುಮಾರು 188 ಕಿಮೀ ಚಾರಣ ಮತ್ತು 400 ಕಿಮೀ ಚಾಲನೆಯನ್ನು ಒಳಗೊಂಡಿತ್ತು. ನಾವು ಕಡಿದಾದ ಮೆಟ್ಟಿಲುಗಳು, ನಿರ್ಜನ ಕಣಿವೆಗಳು, ಕಲ್ಲುಬಂಡೆಗಳ ಹಾದಿಗಳು, ದಟ್ಟ ಅರಣ್ಯಗಳು ಮತ್ತು ಹಿಮಾವೃತ ಶಿಖರಗಳನ್ನು ದಾಟಿದೆವು. ಬೈಕಿಂಗ್ ಮತ್ತು ಪರ್ವತಾರೋಹಣ ಸೇರಿದಂತೆ ಪ್ರತಿಯೊಂದು ಹಂತವು ನಮ್ಮ ಶಕ್ತಿಯನ್ನು ಪರೀಕ್ಷಿಸಿತು. ನಾವು ಶಿಮ್ಲಾದಲ್ಲಿ ಮೊದಲ ಹಂತವನ್ನು ಪೂರ್ಣಗೊಳಿಸಿದೆವು.&lt;/p&gt;&lt;p&gt;ಟಿಬೆಟ್ ಮತ್ತು ಭಾರತದ ನಡುವೆ ಇರುವ ಸ್ಥಿತಿ ಕಣಿವೆಯ ಭೂ ಪ್ರದೇಶವು ಒಂದು ಭಿನ್ನ ಲೋಕದಂತೆ ಭಾಸವಾಗುತ್ತದೆ. ಶಿಮ್ಲಾದಿಂದ ನಿರ್ಜನ ಪ್ರದೇಶಗಳ ಮೂಲಕ ಪ್ರಯಾಣಿಸಿ ಬುದ್ಧ ವಿಹಾರಗಳು ಮತ್ತು ಒರಟಾದ ಭೂಪ್ರದೇಶಕ್ಕೆ ಹೆಸರುವಾಸಿಯಾದ ಭಾರತ-ಟಿಬೆಟ್ ಗಡಿಯಲ್ಲಿರುವ ಕೊನೆಯ ಗ್ರಾಮವಾದ ಚಿಟ್ಕುಲ್ ತಲುಪಿದೆವು. ಅಲ್ಲಿಂದ ಕುನು ಮನಾಲಿ, ಲೆಹ್, ಲಡಾಕ್, ಸಿಯಾಚಿನ್ ಗಡಿ ಪ್ರದೇಶ, ರೇಜಾಂಗ್ ಲಾ, ಕಾರ್ಗಿಲ್, ಶ್ರೀನಗರ, ಅಮೃತಸರ, ವಾಘಾ ಗಡಿ, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಮಾರ್ಗವಾಗಿ ರಾಣಿಬೆನ್ನೂರಿಗೆ ಮರಳಿದೆವು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2"/>
        </item>
        <item>
            <title><![CDATA[ವಿದ್ಯೆ ಕಲಿಸಿದ ಗುರುವಿನ ಕನಸು ಈಡೇರಿಸಿದ ವಿದ್ಯಾರ್ಥಿ; ನೆಚ್ಚಿನ ಮೇಸ್ಟ್ರಿಗೆ 'ಹೊಸ ಕಾರು' ಗಿಫ್ಟ್ ಕೊಟ್ಟ ಶಿಷ್ಯ!]]></title>
            <link>https://kannada.asianetnews.com/karnataka-districts/haveri-school-old-student-naveen-gifted-maruti-suzuki-swift-car-to-his-favorite-teacher-vastrad-sat/articleshow-os4oknt</link>
            <guid isPermaLink="true">https://kannada.asianetnews.com/karnataka-districts/haveri-school-old-student-naveen-gifted-maruti-suzuki-swift-car-to-his-favorite-teacher-vastrad-sat/articleshow-os4oknt</guid>
            <pubDate>Tue, 09 Jun 2026 20:57:34 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯಲ್ಲಿ, ಶಿಕ್ಷಕರೊಬ್ಬರ ನಿವೃತ್ತಿ ದಿನದಂದು ಶಿಷ್ಯನೊಬ್ಬ ಕಾರನ್ನು ಉಡುಗೊರೆಯಾಗಿ ನೀಡಿ ಅಪರೂಪದ ಗುರುದಕ್ಷಿಣೆ ಸಲ್ಲಿಸಿದ್ದಾನೆ. ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ನಡೆದ ಈ ಘಟನೆಯು, ಆಧುನಿಕ ಕಾಲದಲ್ಲಿಯೂ ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಸಾರಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktpftcv331kqnehftpz1k5yq,imgname-haveri-student-car-gifted-to-teacher-1781018735459.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: '&lt;/strong&gt;ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರಃ' ಎಂಬ ಮಾತಿಗೆ ಅನ್ವರ್ಥ ಎಂಬಂತೆ ಹಾವೇರಿ ಜಿಲ್ಲೆಯಲ್ಲಿ ಒಂದು ಅಪರೂಪದ ಘಟನೆ ನಡೆದಿದೆ. ತನಗೆ ಅಕ್ಷರ ಕಲಿಸಿ, ಬಡತನದ ನಡುವೆಯೂ ಆಸರೆಯಾಗಿ ನಿಂತು ಜೀವನ ರೂಪಿಸಿದ ಶಿಕ್ಷಕನಿಗೆ, ಅವರ ನಿವೃತ್ತಿಯ ದಿನದಂದು ಶಿಷ್ಯನೊಬ್ಬ ಕಾರನ್ನು ಉಡುಗೊರೆಯಾಗಿ ನೀಡುವ ಮೂಲಕ ಮರೆಯಲಾಗದ 'ಗುರುದಕ್ಷಿಣೆ' ಸಮರ್ಪಿಸಿದ್ದಾನೆ.&lt;/p&gt;&lt;p&gt;ಹಾವೇರಿ ಜಿಲ್ಲೆಯ ಹಾನಗಲ್&zwnj;ನ ಕುಮಾರೇಶ್ವರ ವಿದ್ಯಾವರ್ಧಕ ಟ್ರಸ್ಟ್ ನಡೆಸುತ್ತಿರುವ ಕುಮಾರೇಶ್ವರ ಪ್ರೌಢಶಾಲೆಯಲ್ಲಿ ಈ ಭಾವನಾತ್ಮಕ ಸನ್ನಿವೇಶ ಕಂಡುಬಂದಿದೆ. ಇಲ್ಲಿ ದೀರ್ಘಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸಿ.ಎಸ್. ವಸ್ತ್ರದ್ ಅವರ ನಿವೃತ್ತಿ ಅಂಗವಾಗಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭ ಇಡೀ ಜಿಲ್ಲೆಯಾದ್ಯಂತ ಈಗ ಚರ್ಚೆಯ ವಿಷಯವಾಗಿದೆ.&lt;/p&gt;&lt;h2&gt;&lt;strong&gt;ಸಹಸ್ರ ಶಿಷ್ಯರ ಸಮಾಗಮ:&lt;/strong&gt;&lt;/h2&gt;&lt;p&gt;ಮೇ 30 ರಂದು ನಡೆದ ಈ ಸಮಾರಂಭಕ್ಕೆ ಶಾಲೆಯ ಸುಮಾರು 1000ಕ್ಕೂ ಹೆಚ್ಚು ಹಳೆ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದರು. ತಮ್ಮ ನೆಚ್ಚಿನ ಶಿಕ್ಷಕನಿಗೆ ಗೌರವ ಸಲ್ಲಿಸಲು ನಾಡಿನ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು. ಆದರೆ ಈ ಕಾರ್ಯಕ್ರಮದ ಹೈಲೈಟ್ ಆಗಿದ್ದು 2007ನೇ ಸಾಲಿನ ಎಸ್&zwnj;ಎಸ್&zwnj;ಎಲ್&zwnj;ಸಿ ಬ್ಯಾಚ್&zwnj;ನ ವಿದ್ಯಾರ್ಥಿ ನವೀನ್ ಹುಲಿಹಳ್ಳಿ ನೀಡಿದ ವಿಶೇಷ ಕಾಣಿಕೆ. ನವೀನ್ ತನ್ನ ಗುರುವಿಗೆ ಬರೋಬ್ಬರಿ 7 ಲಕ್ಷಕ್ಕೂ ಅಧಿಕ ಮೌಲ್ಯದ ಹೊಸ 'ಮಾರುತಿ ಸುಜುಕಿ ಸ್ವಿಫ್ಟ್' ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಬಡ ವಿದ್ಯಾರ್ಥಿಗೆ ಪೋಷಕರಾಗಿದ್ದ ಶಿಕ್ಷಕ:&lt;/strong&gt;&lt;/h2&gt;&lt;p&gt;ಬೆಂಗಳೂರಿನ ಎಂಎನ್&zwnj;ಸಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ನವೀನ್ ಅವರ ಈ ನಿರ್ಧಾರದ ಹಿಂದೆ ಒಂದು ನೋವಿನ ಮತ್ತು ಸ್ಫೂರ್ತಿದಾಯಕ ಕಥೆಯಿದೆ. ನವೀನ್ ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದರು. ತೀವ್ರ ಬಡತನದ ಕಾರಣ ಅವರ ಶಿಕ್ಷಣ ಅರ್ಧಕ್ಕೆ ನಿಲ್ಲುವ ಹಂತ ತಲುಪಿತ್ತು. ಅಂತಹ ಸಮಯದಲ್ಲಿ ಶಿಕ್ಷಕ ವಸ್ತ್ರದ್ ಅವರು ನವೀನ್&zwnj;ಗೆ ಆರ್ಥಿಕವಾಗಿ ಸಹಾಯ ಮಾಡಿದ್ದಲ್ಲದೆ, ರಜಾ ದಿನಗಳಲ್ಲೂ ವಿಶೇಷ ಪಾಠಗಳನ್ನು ಹೇಳಿಕೊಟ್ಟಿದ್ದರು. ಸ್ನಾತಕೋತ್ತರ ಪದವಿ ಮುಗಿಯುವವರೆಗೂ ಶಿಕ್ಷಕರು ನವೀನ್&zwnj;ಗೆ ಒಬ್ಬ ಪೋಷಕನಂತೆ ಬೆನ್ನೆಲುಬಾಗಿ ನಿಂತಿದ್ದರು.&lt;/p&gt;&lt;h2&gt;&lt;strong&gt;ಶಿಷ್ಯನ ಕೃತಜ್ಞತೆ - ಗುರುವಿನ ಭಾವುಕತೆ:&lt;/strong&gt;&lt;/h2&gt;&lt;p&gt;ಕಾರಿನ ಕೀ ಹಸ್ತಾಂತರಿಸಿ ಮಾತನಾಡಿದ ನವೀನ್, 'ವಸ್ತ್ರದ್ ಸರ್ ಕೇವಲ ಪಠ್ಯದ ಪಾಠ ಮಾಡಲಿಲ್ಲ, ಜೀವನದ ಪಾಠ ಕಲಿಸಿದರು. ನನ್ನ ಜೀವನದ ಈ ಯಶಸ್ಸಿಗೆ ಅವರೇ ಕಾರಣ. ಅವರಿಗೆ ಈ ಕಾರು ನೀಡುತ್ತಿರುವುದು ನನ್ನ ಸಣ್ಣ ಕೃತಜ್ಞತೆ ಅಷ್ಟೇ,' ಎಂದರು. ಶಿಕ್ಷಕ ಸಿ.ಎಸ್. ವಸ್ತ್ರದ್ ಅವರು ಮಾತನಾಡಿ, 'ನನ್ನ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ಸೇರಿರುವುದೇ ನನಗೆ ದೊಡ್ಡ ಪ್ರಶಸ್ತಿ. ನವೀನ್ ನಡೆ ನನಗೆ ಮಾತು ಬಾರದಂತೆ ಮಾಡಿದೆ. ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಅಷ್ಟೇ' ಎಂದು ಭಾವುಕರಾದರು.&lt;/p&gt;&lt;p&gt;ಹಾನಗಲ್&zwnj;ನ ಕುಮಾರೇಶ್ವರ ಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಈ ಸಮಾರಂಭವು ಆಧುನಿಕ ಕಾಲದಲ್ಲೂ 'ಗುರು-ಶಿಷ್ಯ' ಪರಂಪರೆ ಜೀವಂತವಾಗಿದೆ ಎಂಬುದನ್ನು ಸಾಬೀತುಪಡಿಸಿದೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/haveri-school-old-student-naveen-gifted-maruti-suzuki-swift-car-to-his-favorite-teacher-vastrad-sat/articleshow-os4oknt"/>
        </item>
        <item>
            <title><![CDATA[ಹುಬ್ಬಳ್ಳಿ-ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಘೋಷಣೆ, 5 ಜಿಲ್ಲೆಯ ಪ್ರವಾಸಿಗರಿಗೆ ಇದೊಂದು ಆಫರ್!]]></title>
            <link>https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</link>
            <guid isPermaLink="true">https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm</guid>
            <pubDate>Wed, 17 Jun 2026 12:01:04 +0530</pubDate>
            <description><![CDATA[ನೈಋತ್ಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 20 ಮತ್ತು 21 ರಂದು ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಪ್ರವಾಸಿಗರಿಗೆ ಅನುಕೂಲಕರವಾದ ವೇಳಾಪಟ್ಟಿಯನ್ನು ಹೊಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khp601b9hctbmkhxep8fe8wz,imgname-indian-railway--2--1771344758121.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಧಾರವಾಡ: &lt;/strong&gt;ಹುಬ್ಬಳ್ಳಿ ಮತ್ತು ಪ್ರವಾಸಿ ತಾಣಗಳಿರುವ ಚಿಕ್ಕಮಗಳೂರು ನಡುವೆ ಪ್ರಯಾಣಿಸುವ ಜನರಿಗೆ ನೈಋತ್ಯ ರೈಲ್ವೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಹಾಗೂ ರೈಲುಗಳಲ್ಲಿನ ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಜೂನ್ 20 ಮತ್ತು 21 ರಂದು ಈ ಎರಡೂ ನಗರಗಳ ನಡುವೆ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ರೈಲು ಉತ್ತರ ಮತ್ತು ಮಧ್ಯ ಕರ್ನಾಟಕದ ಒಟ್ಟು 5 ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಮಾನ್ಸೂನ್ ಪ್ರಕೃತಿ ಸವಿಯಲು ಇದೊಂದು ಆಫರ್ ನೀಡಿದಂತಿದೆ. ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾದ ಈ ರೈಲಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.&lt;/p&gt;&lt;h2&gt;ರೈಲಿನ ವೇಳಾಪಟ್ಟಿ ಮತ್ತು ಸಂಚಾರದ ವಿವರ&lt;/h2&gt;&lt;p&gt;ಈ ವಿಶೇಷ ರೈಲನ್ನು ಜೂನ್ 20 (ಶನಿವಾರ) ಮತ್ತು ಜೂನ್ 21 (ಭಾನುವಾರ) ರಂದು ಒಟ್ಟು ಎರಡು ಟ್ರಿಪ್&zwnj;ಗಳ ಕಾಲ ಓಡಿಸಲಾಗುತ್ತಿದೆ.&lt;/p&gt;&lt;p&gt;ಹುಬ್ಬಳ್ಳಿ - ಚಿಕ್ಕಮಗಳೂರು ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07341): ಜೂನ್ 20 ಮತ್ತು 21 ರಂದು ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಕ್ಕೆ ಚಿಕ್ಕಮಗಳೂರು ನಿಲ್ದಾಣವನ್ನು ತಲುಪಲಿದೆ.&lt;/p&gt;&lt;p&gt;ಚಿಕ್ಕಮಗಳೂರು - ಹುಬ್ಬಳ್ಳಿ ವಿಶೇಷ ಎಕ್ಸ್&zwnj;ಪ್ರೆಸ್ (ರೈಲು ಸಂಖ್ಯೆ: 07342): ಜೂನ್ 20 ಮತ್ತು 21 ರಂದು ಚಿಕ್ಕಮಗಳೂರಿನಿಂದ ಸಂಜೆ 5:30 ಕ್ಕೆ ಹೊರಟು, ಅದೇ ದಿನ ರಾತ್ರಿ 11:20 ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ತಲುಪಲಿದೆ.&lt;/p&gt;&lt;h2&gt;ಎಲ್ಲೆಲ್ಲಿ ನಿಲುಗಡೆ ಇರಲಿದೆ? (ಮಾರ್ಗ ಮತ್ತು ನಿಲ್ದಾಣಗಳು)&lt;/h2&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಮಾರ್ಗಮಧ್ಯೆ ಪ್ರಮುಖ ನಗರಗಳು ಸೇರಿದಂತೆ ಒಟ್ಟು 15 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.&lt;/p&gt;&lt;p&gt;ಪ್ರಮುಖ ನಿಲುಗಡೆಗಳು: ಕುಂದಗೋಳ, ಸಂಶಿ (ಸೌಂಶಿ), ಯಳವಿಗಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು(ಚಿತ್ರದುರ್ಗ), ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ.&lt;/p&gt;&lt;h2&gt;ಬೋಗಿಗಳ ವಿವರ&amp;nbsp;&lt;/h2&gt;&lt;p&gt;ಈ ವಿಶೇಷ ರೈಲು ಒಟ್ಟು 10 ಬೋಗಿಗಳನ್ನು (Coaches) ಒಳಗೊಂಡಿರುತ್ತದೆ. ಸಾಮಾನ್ಯ ಮತ್ತು ಮಧ್ಯಮ ವರ್ಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೋಗಿಗಳನ್ನು ವಿನ್ಯಾಸಗೊಳಿಸಲಾಗಿದೆ:&lt;/p&gt;&lt;ul&gt; &lt;li&gt;1 ಸ್ಲೀಪರ್ ಕ್ಲಾಸ್ ಬೋಗಿ (Sleeper Class)&lt;/li&gt; &lt;li&gt;7 ಸಾಮಾನ್ಯ ದರ್ಜೆ ಬೋಗಿಗಳು (General Coach)&lt;/li&gt; &lt;li&gt;2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್ ಹಾಗೂ ದಿವ್ಯಾಂಗರ ವಿಶೇಷ ಕಂಪಾರ್ಟ್&zwnj;ಮೆಂಟ್ ಬೋಗಿಗಳು.&lt;/li&gt;&lt;/ul&gt;&lt;h2&gt;ಪ್ರವಾಸಿಗರಿಗೆ &amp;nbsp;ಸೂಕ್ತ ಸಮಯದ ಪ್ಲಾನಿಂಗ್!&lt;/h2&gt;&lt;p&gt;ನೈಋತ್ಯ ರೈಲ್ವೆ ಅಧಿಕಾರಿಗಳು ಈ ರೈಲಿನ ವೇಳಾಪಟ್ಟಿಯನ್ನು ಪ್ರವಾಸಿಗರಿಗೆ ಅತ್ಯಂತ ಅನುಕೂಲವಾಗುವ ರೀತಿಯಲ್ಲಿ ಸಿದ್ಧಪಡಿಸಿದ್ದಾರೆ.&lt;/p&gt;&lt;p&gt;ರೈಲು ಬೆಳಗ್ಗೆ 11:15ಕ್ಕೆ ಚಿಕ್ಕಮಗಳೂರು ತಲುಪುವುದರಿಂದ, ಪ್ರವಾಸಿಗರು ಆರಾಮವಾಗಿ &amp;nbsp;ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಬಾಬಾಬುಡನ್&zwnj;ಗಿರಿ ಮುಂತಾದ ಕಡೆ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಮಾಡಲು ಸಾಕಷ್ಟು ಸಮಯ ಸಿಗುತ್ತದೆ.&lt;/p&gt;&lt;p&gt;ಇನ್ನು ಹಿಂದಿರುಗುವಾಗ ಭಾನುವಾರ ಸಂಜೆ 5:30ಕ್ಕೆ ರೈಲು ಇರುವುದರಿಂದ, ವೀಕೆಂಡ್&zwnj;ನಲ್ಲಿ ಇಡೀ ದಿನ ಸುತ್ತಾಡಿ, ಯಾವುದೇ ಆತುರವಿಲ್ಲದೇ ಆರಾಮವಾಗಿ ರೈಲು ಹತ್ತಿ ರಾತ್ರಿಯೊಳಗೆ ಹುಬ್ಬಳ್ಳಿಗೆ ತಲುಪಬಹುದಾಗಿದೆ. ಸಾರ್ವಜನಿಕರು ಹಾಗೂ ಪ್ರಕೃತಿ ಪ್ರೇಮಿಗಳು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ಕೋರಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/south-western-railway-announces-special-train-between-hubballi-and-chikkamagaluru-june-20-and-21st-gdp/articleshow-oxm5glm"/>
        </item>
        <item>
            <title><![CDATA[ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕದಂತೆ ಮನವಿ; ರೈತ ಸಂಘದ ಆತಂಕ ಏನು?]]></title>
            <link>https://kannada.asianetnews.com/karnataka-districts/appeal-not-to-sign-india-us-free-trade-agreement-what-are-the-concerns-of-the-haveri-farmers-association-mrq/articleshow-po3kex2</link>
            <guid isPermaLink="true">https://kannada.asianetnews.com/karnataka-districts/appeal-not-to-sign-india-us-free-trade-agreement-what-are-the-concerns-of-the-haveri-farmers-association-mrq/articleshow-po3kex2</guid>
            <pubDate>Tue, 23 Jun 2026 08:20:21 +0530</pubDate>
            <description><![CDATA[ಮುಂಬರಲಿರುವ ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದವು ದೇಶದ ಕೃಷಿ ವಲಯಕ್ಕೆ ಮಾರಕವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆತಂಕ ವ್ಯಕ್ತಪಡಿಸಿದೆ. ಆಮದು ಸುಂಕ ಕಡಿತ ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಧಕ್ಕೆಯಾಗುವ ಸಾಧ್ಯತೆಯಿಂದಾಗಿ, ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ರೈತ ಮುಖಂಡರು ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvs5y8y4880dkbygqep5a7dm,imgname-haveri-farmer--1--1782182781892.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ&lt;/strong&gt;: ಮುಂಬರಲಿರುವ ಭಾರತ-ಅಮೆರಿಕ ಮಧ್ಯಂತರ ಮುಕ್ತ ವ್ಯಾಪಾರ ಒಪ್ಪಂದದಿಂದ ದೇಶದ ಕೃಷಿ ವಲಯಕ್ಕೆ ಭಾರಿ ಪೆಟ್ಟು ಬೀಳಲಿದ್ದು, ಯಾವುದೇ ಕಾರಣಕ್ಕೂ ರೈತರ ಹಿತಾಸಕ್ತಿ ಬಲಿಗೊಡುವ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ತುರ್ತು ಮನವಿ ಸಲ್ಲಿಸಿದರು.&lt;/p&gt;&lt;p&gt;ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರೈತ ಮುಖಂಡರು, ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ಜೂ. 23, 24ರಂದು ನವದೆಹಲಿಗೆ ಭೇಟಿ ನೀಡಲಿದ್ದು, ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆಯಿದೆ. ಇದರಿಂದ ರೈತ ಸಮುದಾಯದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಸ್ಥಳೀಯ ಮಾರುಕಟ್ಟೆ ನಾಶದ ಆತಂಕ&lt;/strong&gt;&lt;/h2&gt;&lt;p&gt;ಹತ್ತಿ, ಜೋಳ, ಸೋಯಾಬೀನ್ ಎಣ್ಣೆ ಹಾಗೂ ಸಂಸ್ಕರಿಸಿದ ಹಣ್ಣುಗಳ ಮೇಲಿನ ಆಮದು ಸುಂಕ ಕಡಿತಗೊಳಿಸಿದರೆ, ಅಮೆರಿಕದ ಸಬ್ಸಿಡಿಯುಕ್ತ ಉತ್ಪನ್ನಗಳ ಎದುರು ನಮ್ಮ ರೈತರು ಸ್ಪರ್ಧಿಸಲು ಸಾಧ್ಯವಿಲ್ಲ. ತಾಂತ್ರಿಕ ಅಡೆತಡೆಗಳ ನಿವಾರಣೆಯಿಂದ ವಿದೇಶಿ ಹಾಲು, ಮಾಂಸ, ಜೋಳ ಭಾರತದ ಮಾರುಕಟ್ಟೆ ಪ್ರವೇಶಿಸಿ ಸ್ಥಳೀಯ ಮಾರುಕಟ್ಟೆ ನಾಶವಾಗಲಿದೆ. ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಅಮೆರಿಕವು ಭಾರತದ ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ತರಲು ಒತ್ತಡ ಹೇರುತ್ತಿದೆ. ಈಗಾಗಲೇ ಸೂಪರ್ ಎಲ್-ನಿನೋ ಮುಂಗಾರು ಭೀತಿಯಿರುವಾಗ, ಎಂ.ಎಸ್.ಪಿಗೆ ಧಕ್ಕೆಯಾದರೆ ಭತ್ತ ಮತ್ತು ಗೋಧಿ ಬೆಳೆಯುವ ಕೋಟ್ಯಂತರ ರೈತರು ಬೀದಿಪಾಲಾಗಲಿದ್ದಾರೆ. ಯಾವುದೇ ಕಾರಣಕ್ಕೂ ಕೃಷಿಕರು, ಹಾಲು ಉತ್ಪಾದಕರು ಹಾಗೂ ಮೀನುಗಾರರನ್ನು ಸಂಕಷ್ಟಕ್ಕೆ ತಳ್ಳುವ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೈಕೊಟ್ಟ ಮಳೆ: 11 ಎಕ್ರೆ ಗೋವಿನಜೋಳದ ಬೆಳೆ ಟ್ರ&zwj;್ಯಾಕ್ಟರ್&zwnj;ನಿಂದ ನಾಶ ಮಾಡಿದ ಹಾವೇರಿ ರೈತ&lt;/strong&gt;&lt;/p&gt;&lt;p&gt;ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಶಿವಯೋಗಿ ಹೊಸಗೌಡ್ರ, ಜಾನ್ ಪುನಿತ್, ಸುಭಾಸ ಬನ್ನಿಹಟ್ಟಿ, ರಾಜು ತರ್ಲಗಟ್ಟ ಇತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 17 ಲಕ್ಷಕ್ಕೆ ಕೋಟ್ಯಂತರ ಮೌಲ್ಯದ 5 ಎಕರೆ ಕೃಷಿಭೂಮಿ ಕಬಳಿಕೆ? ದೂರು ದಾಖಲಿಸಿದ ನೊಂದ ರೈತ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/appeal-not-to-sign-india-us-free-trade-agreement-what-are-the-concerns-of-the-haveri-farmers-association-mrq/articleshow-po3kex2"/>
        </item>
        <item>
            <title><![CDATA[ಬದುಕಿದ್ದಾಗಲೇ ಬರ್ತಿವೆ ಡೆತ್​ ಸರ್ಟಿಫಿಕೇಟ್​: ಹಾವೇರಿಯಲ್ಲೇ ಇನ್ನೊಂದು ಎಡವಟ್ಟು- ಸರ್ಕಾರದ ಸೌಲಭ್ಯಗಳು ಕಟ್​]]></title>
            <link>https://kannada.asianetnews.com/karnataka-districts/death-certificate-in-the-name-of-living-person-another-case-in-haveri-suc/articleshow-qe9p0mi</link>
            <guid isPermaLink="true">https://kannada.asianetnews.com/karnataka-districts/death-certificate-in-the-name-of-living-person-another-case-in-haveri-suc/articleshow-qe9p0mi</guid>
            <pubDate>Thu, 18 Jun 2026 11:30:42 +0530</pubDate>
            <description><![CDATA[ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ, ತಾಯಿಯ ಮರಣ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ ವೃದ್ಧೆಗೆ, ಆಕೆಯ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಲಾಗಿದೆ. ಈ ಆಡಳಿತಾತ್ಮಕ ಎಡವಟ್ಟಿನಿಂದಾಗಿ, ಶಿವಗಂಗವ್ವ ಎಂಬ ಮಹಿಳೆ ತನ್ನೆಲ್ಲಾ ಸರ್ಕಾರಿ ಸೌಲಭ್ಯಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kvcn1taxtmv5ykczhsqz7cmv,imgname-death-certificate-1781762419036.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ಹಾವೇರಿ ಜಿಲ್ಲಾಡಳಿತದಿಂದಲೇ ಈಗ ಮತ್ತೊಂದು ಎಡವಟ್ಟಾಗಿದ್ದು, ವೃದ್ಧ ಮಹಿಳೆಯೊಬ್ಬರು ನರಳುವಂತಾಗಿರುವ ಘಟನೆ ವರದಿಯಾಗಿದೆ. ಕೆಲ ತಿಂಗಳ ಹಿಂದೆ, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಸಿಬ್ಬಂದಿಯೊಬ್ಬರು ಮಾಡಿದ್ದ ಎಡವಟ್ಟಿನಿಂದ ಕುಟುಂಬವನ್ನು ನರಳುವಂತಾಗಿತ್ತು. ಪತ್ನಿ ಸಾವನ್ನಪ್ಪಿದ ನಂತರ ಆಕೆಯ ಮರಣ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ಪತಿಗೆ, ಅವರೇ ಸತ್ತ ಸರ್ಟಿಫಿಕೇಟ್​ ನೀಡಲಾಗಿತ್ತು. ಪತ್ನಿ ಸತ್ತಿದ್ದರೆ, ಬದುಕಿದ್ದ ಪತಿಯ ಹೆಸರಿನಲ್ಲಿ ಸರ್ಟಿಫಿಕೇಟ್​ ಕೊಟ್ಟು ಅವರು ಅದನ್ನು ಸರಿಪಡಿಸಲು ಮತ್ತಷ್ಟು ಸಮಸ್ಯೆ ಎದುರಿಸಬೇಕಾಗಿತ್ತು.&lt;/p&gt;&lt;p&gt;ರಟ್ಟಿಹಳ್ಳಿ ತಾಲೂಕಿನ ಶಿರಗಂಬಿ ಗ್ರಾಮದ ತೋಪನಗೌಡ ಗುಬ್ಬಿ ಎಂಬುವವರ ಪತ್ನಿ ಮಲ್ಲಮ್ಮ ಅವರು ಕಳೆದ 12-08-2021 ರಂದು ಮೃತಪಟ್ಟಿದ್ದರು. ಪತ್ನಿಯ ಮರಣದ ನಂತರ ಸರ್ಕಾರಿ ದಾಖಲೆಗಳಿಗಾಗಿ ತೋಪನಗೌಡರು ಪತ್ನಿಯ ಡೆತ್ ಸರ್ಟಿಫಿಕೇಟ್ ಕೇಳಿ ಅರ್ಜಿ ಸಲ್ಲಿಸಿದ್ದರು. ಆದರೆ ಮಲ್ಲಮ್ಮನ ಹೆಸರಿಗೆ ಬದಲು ಜೀವಂತ ಇರುವ ಪತಿ ಅಂದರೆ ಅರ್ಜಿ ಸಲ್ಲಿಸಿದ ತೋಪನಗೌಡರ ಹೆಸರಲ್ಲೇ ಮರಣ ಪ್ರಮಾಣ ಪತ್ರವನ್ನು ಪ್ರಿಂಟ್ ಮಾಡಿ ಕೈಗಿಟ್ಟಿದ್ದರು. ಈ ಎಡವಟ್ಟು ನಡೆದು ಐದು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿತ್ತು.&lt;/p&gt;&lt;h2&gt;&lt;strong&gt;ಮತ್ತೊಂದು ಘಟನೆ&lt;/strong&gt;&lt;/h2&gt;&lt;p&gt;ಆದರೆ, ಇದೀಗ ಮಹಿಳೆಯೊಬ್ಬರಿಗೆ ಇದೇ ಸ್ಥಿತಿ ಆಗಿರುವ ಕಾರಣ, ಸರ್ಕಾರಿ ಸೌಲಭ್ಯಗಳೆಲ್ಲಾ ಕಟ್​ ಆಗಿ ಈಗ ಮಹಿಳೆ ನರಳುವಂತಾಗಿದೆ. ಅಮ್ಮ ಸತ್ತಿದ್ದರೆ ಮಗಳ ಹೆಸರಿನ ಮರಣ ಪ್ರಮಾಣ ಪತ್ರ ಬಂದಿರುವ ಕಾರಣ, ಆಕೆಗೆ ಸರ್ಕಾರದಿಂದ ಸಿಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಕಟ್​ ಮಾಡಲಾಗಿದೆ ಎಂದು ಮಹಿಳೆ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ.&lt;/p&gt;&lt;p&gt;ಅತ್ತಿಗೇರಿ ಗ್ರಾಮದ ಶಿವಗಂಗವ್ವ ತಳಳ್ಳಿ ಎಂಬ ಮಹಿಳೆಯ ತಾಯಿ ಶಂಕ್ರವ್ವ ಮೀಳ್ಳಿ ಇತ್ತೀಚೆಗೆ ನಿಧನರಾಗಿದ್ದರು. ತಾಯಿ ಮೃತಪಟ್ಟಿರುವ ಕಾರಣ ಡೆತ್​ ಸರ್ಟಿಫಿಕೇಟ್​ಗೆ ವೃದ್ಧೆಯಾಗಿರುವ ಮಗಳು ಶಿವಗಂಗವ್ವ ಅರ್ಜಿ ಸಲ್ಲಿಸಿದ್ದರು. ಆದರೆ, ಶಿಗ್ಗಾಂವಿ ತಾಲೂಕಾಡಳಿತ ಮತ್ತು ಅತ್ತಿಗೇರಿ ಗ್ರಾಮದ ಅಧಿಕಾರಿಗಳ ಎಡವಟ್ಟಿನಿಂದ ಜೀವಂತವಾಗಿರುವ ಮಗಳು ಶಿವಗಂಗವ್ವಳ ಹೆಸರಲ್ಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದಾರೆ. ಇದು ಶಿವಗಂಗವ್ವ ಅವರಿಗೆ ತಿಳಿದೇ ಇರಲಿಲ್ಲ. ಬ್ಯಾಂಕಿನಲ್ಲಿ ಹಣ ತೆಗೆಯಲು ಹೋದಾಗ ವಿಷಯ ತಿಳಿದಿದೆ. ಆ ಬಳಿಕ ನೋಡಿದ್ರೆ ಅದು ತಾವೇ ಸತ್ತು ಹೋಗಿರುವ ಸರ್ಟಿಫಿಕೇಟ್​ ಎಂದು ತಿಳಿದಿದೆ.&lt;/p&gt;&lt;h3&gt;&lt;strong&gt;ಸರ್ಕಾರಿ ಸೌಲಭ್ಯಗಳಿಂದ ವಂಚಿತ&lt;/strong&gt;&lt;/h3&gt;&lt;p&gt;ಶಿವಗಂಗವ್ವ ಸದ್ಯ ಸರ್ಕಾರದ ಎಲ್ಲಾ ಸೌಲಭ್ಯಗಳಿಂದ ವಂಚಿತಳಾಗಿದ್ದಾರೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಅಷ್ಟೇ ಅಲ್ಲದೆ, ಅವರಿಗೆ ಬರುತ್ತಿದ್ದ ವೃದ್ಧಾಪ್ಯ ವೇತನ ಹಾಗೂ ಗಂಡನ ಪೀಚಣಿ ಹಣವೂ ಸಹ ರದ್ದಾಗಿದೆ. ರೇಷನ್ ಮತ್ತು ಹಣ ಯಾವುದೂ ಇಲ್ಲವಾಗಿದೆ. ಇದನ್ನು ಶಿವಗಂಗವ್ವ ಮತ್ತು ಕುಟುಂಬಸ್ಥರು ತಕ್ಷಣವೇ ಗ್ರಾಮ ಪಂಚಾಯತಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎನ್ನಲಾಗುತ್ತಿದೆ. ಅತ್ತಿಗೇರಿ ಗ್ರಾಮಸ್ಥರು ಹಾಗೂ ವೃದ್ಧೆ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>haveri</category>
            <dc:creator>Suchethana D</dc:creator>
            <atom:link href="https://kannada.asianetnews.com/karnataka-districts/death-certificate-in-the-name-of-living-person-another-case-in-haveri-suc/articleshow-qe9p0mi"/>
        </item>
        <item>
            <title><![CDATA[ಬೆಂಗಳೂರು-ದೆಹಲಿ ರೈಲಲ್ಲಿ ಹಾವೇರಿ ಸಮೀಪ ಅಕ್ರಮ ಮಾರಾಟಗಾರರಿಂದ ಟ್ರೈನ್ ಸಿಬ್ಬಂದಿಗೆ ಚಾಕು ಇರಿತ, ಇಬ್ಬರು ಗಂಭೀರ!]]></title>
            <link>https://kannada.asianetnews.com/karnataka-districts/bengaluru-delhi-train-pantry-staff-stabbed-by-illegal-vendors-in-yesvantpur-hazrat-nizamuddin-sampark-kranti-express-gdp/articleshow-r43u5b3</link>
            <guid isPermaLink="true">https://kannada.asianetnews.com/karnataka-districts/bengaluru-delhi-train-pantry-staff-stabbed-by-illegal-vendors-in-yesvantpur-hazrat-nizamuddin-sampark-kranti-express-gdp/articleshow-r43u5b3</guid>
            <pubDate>Sat, 20 Jun 2026 17:07:32 +0530</pubDate>
            <description><![CDATA[&lt;p&gt;ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಸಂಪರ್ಕ ಕ್ರಾಂತಿ ಎಕ್ಸ್&zwnj;ಪ್ರೆಸ್ ರೈಲಿನಲ್ಲಿ, ಅನಧಿಕೃತ ವ್ಯಾಪಾರವನ್ನು ಪ್ರಶ್ನಿಸಿದ್ದಕ್ಕೆ ಪ್ಯಾಂಟ್ರಿ ಸಿಬ್ಬಂದಿ ಮೇಲೆ ಅಕ್ರಮ ಮಾರಾಟಗಾರರ ಗುಂಪೊಂದು ಚಾಕುವಿನಿಂದ ಹಲ್ಲೆ ನಡೆಸಿದೆ. ಈ ಘೋರ ಕೃತ್ಯದಲ್ಲಿ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkzwr0wwwxzjy1k54030qy8m,imgname-new-project--66--1767188089530-1773818086300.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು:&lt;/strong&gt; ರೈಲ್ವೆ ಇಲಾಖೆ ಎಷ್ಟೇ ಬಿಗಿ ಭದ್ರತೆಯ ಭರವಸೆ ನೀಡಿದರೂ, ಚಲಿಸುವ ರೈಲುಗಳಲ್ಲಿ ಸಾಮಾನ್ಯ ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಯ ಸುರಕ್ಷತೆ ಇಂದಿಗೂ ಮರೀಚಿಕೆಯಾಗಿಯೇ ಉಳಿದಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಬೆಂಗಳೂರಿನಿಂದ ದೆಹಲಿಗೆ ಸಂಚರಿಸುತ್ತಿದ್ದ ಪ್ರತಿಷ್ಠಿತ ಎಕ್ಸ್&zwnj;ಪ್ರೆಸ್ ರೈಲೊಂದರಲ್ಲಿ ಅನಧಿಕೃತ ವ್ಯಾಪಾರಿಗಳ ಗ್ಯಾಂಗ್ ಹಾಗೂ ಪ್ಯಾಂಟ್ರಿ ಸಿಬ್ಬಂದಿ ನಡುವೆ ನಡೆದ ವಾಗ್ವಾದ ಭೀಕರ ಹಿಂಸಾಚಾರಕ್ಕೆ ತಿರುಗಿದೆ. ಅಕ್ರಮ ಮಾರಾಟಗಾರರ ಗುಂಪೊಂದು ಪ್ಯಾಂಟ್ರಿ ಸಿಬ್ಬಂದಿ ಮೇಲೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ ಸಂಜೆ ನಡೆದಿದೆ. ಈ ರಕ್ತಪಾತದಲ್ಲಿ ಇಬ್ಬರು ಪ್ಯಾಂಟ್ರಿ ನೌಕರರು ತೀವ್ರವಾಗಿ ಗಾಯಗೊಂಡಿದ್ದಾರೆ.&lt;/p&gt;&lt;h2&gt;ಘಟನೆಯ ಹಿನ್ನೆಲೆ: ಎಸಿ ಕೋಚ್&zwnj;ನಲ್ಲಿ ಶುರುವಾದ ಗಲಾಟೆ&lt;/h2&gt;&lt;p&gt;ಸೋಮವಾರ ಸಂಜೆ ಸುಮಾರು 7 ಗಂಟೆಯ ವೇಳೆಗೆ ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್&zwnj;ಪ್ರೆಸ್ ರೈಲು (Yesvantpur-Hazrat Nizamuddin Sampark Kranti Express) ಹಾವೇರಿ ನಿಲ್ದಾಣವನ್ನು ದಾಟಿ ಮುನ್ನಡೆಯುತ್ತಿತ್ತು. ಈ ವೇಳೆ ರೈಲಿನ ಹವಾನಿಯಂತ್ರಿತ (AC) ಬೋಗಿಯೊಳಗೆ ನುಗ್ಗಿದ ಅನಧಿಕೃತ ಮಾರಾಟಗಾರನೊಬ್ಬ ಮಸಾಲಾ ಕಡಲೆಕಾಯಿ (ಮಸಾಲಾ ಶೇಂಗಾ) ಮಾರಾಟ ಮಾಡಲು ಆರಂಭಿಸಿದ್ದಾನೆ.&lt;/p&gt;&lt;p&gt;ರೈಲಿನಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿರುವುದನ್ನು ಗಮನಿಸಿದ ಪ್ಯಾಂಟ್ರಿ ಕಾರ್ಯಾಚರಣೆಯ ಸಿಬ್ಬಂದಿ ಧೀರೇಂದ್ರ ಸಿಂಗ್ (40) ಎಂಬುವವರು ತಕ್ಷಣವೇ ಆತನನ್ನು ಆಕ್ಷೇಪಿಸಿದ್ದಾರೆ. ರೈಲ್ವೆ ನಿಯಮಾವಳಿಗಳ ಪ್ರಕಾರ ಇಲ್ಲಿ ವ್ಯಾಪಾರ ಮಾಡುವಂತಿಲ್ಲ, ತಕ್ಷಣವೇ ಹೊರಗೆ ಹೋಗಿ ಎಂದು ಧೀರೇಂದ್ರ ಸಿಂಗ್ ಎಚ್ಚರಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ಆರಂಭವಾಗಿದೆ.&lt;/p&gt;&lt;h2&gt;ಮಾರಾಕಾಸ್ತ್ರಗಳೊಂದಿಗೆ ಧಾವಿಸಿದ ಅಕ್ರಮ ಗ್ಯಾಂಗ್&lt;/h2&gt;&lt;p&gt;ಧೀರೇಂದ್ರ ಸಿಂಗ್ ಒಂಟಿಯಾಗಿರುವುದನ್ನು ಗಮನಿಸಿದ ಕಡಲೆಕಾಯಿ ವ್ಯಾಪಾರಿ, ರೈಲಿನಲ್ಲೇ ಇದ್ದ ತನ್ನ ಸಹಚರರಿಗೆ ಸದ್ದಿಲ್ಲದೆ ಕರೆ ಮಾಡಿದ್ದಾನೆ. ಧೀರೇಂದ್ರ ಅವರು ಜಿಆರ್&zwnj;ಪಿ (ಸರ್ಕಾರಿ ರೈಲ್ವೆ ಪೊಲೀಸ್)ಗೆ ನೀಡಿದ ದೂರಿನ ಪ್ರಕಾರ, ಕೇವಲ ಕೆಲವೇ ನಿಮಿಷಗಳಲ್ಲಿ ಅದೇ ರೈಲಿನಲ್ಲಿದ್ದ ಸುಮಾರು ಐದು ಜನರ ಅಕ್ರಮ ಮಾರಾಟಗಾರರ ಗುಂಪು ಆತನ ಬೆಂಬಲಕ್ಕೆ ಧಾವಿಸಿದೆ. ಅವರೆಲ್ಲರೂ ಮೊದಲೇ ಸಂಚು ರೂಪಿಸಿಕೊಂಡು ರೈಲು ಹತ್ತಿದವರಂತೆ ಕಾಣುತ್ತಿದ್ದರು. ಪ್ಯಾಂಟ್ರಿ ಸಿಬ್ಬಂದಿ ಪ್ರಶ್ನಿಸಿದ್ದನ್ನೇ ದೊಡ್ಡ ಅಪರಾಧ ಎಂಬಂತೆ ಬಿಂಬಿಸಿ ಜಗಳಕ್ಕೆ ನಿಂತರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.&lt;/p&gt;&lt;p&gt;ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪ್ಯಾಂಟ್ರಿ ಮ್ಯಾನೇಜರ್ ಜಿತೇಂದ್ರ ಸಿಂಗ್ ತೋಮರ್ ಸ್ಥಳಕ್ಕೆ ಆಗಮಿಸಿ, ಗಲಾಟೆ ತಣ್ಣಗಾಗಿಸಲು ಯತ್ನಿಸಿದ್ದಾರೆ. ಆದರೆ, ಮ್ಯಾನೇಜರ್ ಬರುತ್ತಿದ್ದಂತೆಯೇ ಜೇಬಿನಲ್ಲಿದ್ದ ಹರಿತವಾದ ಚಾಕುಗಳನ್ನು ಹೊರತೆಗೆದ ದುಷ್ಕರ್ಮಿಗಳು ಸಿಬ್ಬಂದಿಯ ಮೇಲೆ ಮುಗಿಬಿದ್ದಿದ್ದಾರೆ.&lt;/p&gt;&lt;h2&gt;ರಕ್ತದ ಮಡುವಿನಲ್ಲಿ ಬಿದ್ದ ನೌಕರರು:&lt;/h2&gt;&lt;p&gt;ಆ ದುಷ್ಕರ್ಮಿಗಳು ಧೀರೇಂದ್ರ ಅವರನ್ನು ನೇರವಾಗಿ ಇರಿದು ಕೊಲೆ ಮಾಡಲು ಯತ್ನಿಸಿದರು. ಧೀರೇಂದ್ರ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಚಾಕು ಅವರ ಕುತ್ತಿಗೆಗೆ ತಗುಲಿದ್ದರಿಂದ ತೀವ್ರ ರಕ್ತಸ್ರಾವ ಆರಂಭವಾಯಿತು ಎಂದು ಮ್ಯಾನೇಜರ್ ಜಿತೇಂದ್ರ ಸಿಂಗ್ ತೋಮರ್ ನಡೆದ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ&lt;/p&gt;&lt;p&gt;ಇದೇ ವೇಳೆ ಧೀರೇಂದ್ರ ಅವರ ರಕ್ಷಣೆಗೆ ಧಾವಿಸಿದ ಮತ್ತೊಬ್ಬ ಪ್ಯಾಂಟ್ರಿ ಸಿಬ್ಬಂದಿ ಲೋಕೇಂದ್ರ ಎಂಬುವವರ ಎಡ ಭುಜದ ಭಾಗಕ್ಕೆ ದುಷ್ಕರ್ಮಿಗಳು ಬಲವಾಗಿ ಇರಿದಿದ್ದಾರೆ. ಚಾಕು ತಗುಲಿದ ರಭಸಕ್ಕೆ ಲೋಕೇಂದ್ರ ಅವರ ಭುಜದಿಂದ ರಕ್ತದ ಕಾರಂಜಿ ಚಿಮ್ಮಿದೆ. ಅಷ್ಟಕ್ಕೇ ನಿಲ್ಲದ ಗ್ಯಾಂಗ್, ಪ್ಯಾಂಟ್ರಿ ತಂಡದಲ್ಲಿದ್ದ ಇತರ ಸಿಬ್ಬಂದಿಗಳ ಮೇಲೂ ಮನಬಂದಂತೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ಕೆಲವು ಸರಕು ಸರಂಜಾಮುಗಳನ್ನು ಕಸಿದುಕೊಂಡಿದ್ದಾರೆ.&lt;/p&gt;&lt;h2&gt;ಕರ್ಜಗಿ ನಿಲ್ದಾಣದಲ್ಲಿ ದುಷ್ಕರ್ಮಿಗಳು ಪರಾರಿ&lt;/h2&gt;&lt;p&gt;ರೈಲು ಹಾವೇರಿ ದಾಟಿದ ಬಳಿಕ ಸಿಗ್ನಲ್ ಕ್ರಾಸಿಂಗ್&zwnj;ಗಾಗಿ ಕರ್ಜಗಿ ರೈಲ್ವೆ ನಿಲ್ದಾಣದಲ್ಲಿ ಕೆಲ ಕಾಲ ಸ್ಥಗಿತಗೊಂಡಿತು. ರೈಲು ನಿಲ್ಲುತ್ತಿದ್ದಂತೆಯೇ, ಅಕ್ರಮ ಮಾರಾಟಗಾರರ ಗ್ಯಾಂಗ್ ರೈಲಿನಿಂದ ಕೆಳಕ್ಕೆ ಜಿಗಿದು, ಕತ್ತಲಲ್ಲಿ ಓಡಿಹೋಗಿ ತಲೆಮರೆಸಿಕೊಂಡಿದೆ. ರೈಲು ಮುಂದಿನ ನಿಲ್ದಾಣ ತಲುಪುತ್ತಿದ್ದಂತೆಯೇ ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಸಿಬ್ಬಂದಿ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ.&lt;/p&gt;&lt;h2&gt;ಹಾವೇರಿ ಮೂಲದ ಕಿಡಿಗೇಡಿಗಳ ವಿರುದ್ಧ ಎಫ್&zwnj;ಐಆರ್ ದಾಖಲು&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಸರ್ಕಾರಿ ರೈಲ್ವೆ ಪೊಲೀಸ್ (GRP) ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಹಾವೇರಿ ಮೂಲದವರೆಂದು ಶಂಕಿಸಲಾದ ಐದೂ ಜನ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಸೆಕ್ಷನ್&zwnj;ಗಳ ಅಡಿಯಲ್ಲಿ ಎಫ್&zwnj;ಐಆರ್ (FIR) ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;p&gt;ಕರ್ನಾಟಕ ಜಿಆರ್&zwnj;ಪಿ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸಾರಾ ಫಾತಿಮಾ ಅವರು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ನಮ್ಮ ವಿಶೇಷ ಪೊಲೀಸ್ ತಂಡವು ಆರೋಪಿಗಳ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದೆ. ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸಲಾಗುವುದು. ಸದ್ಯಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದ ಪ್ಯಾಂಟ್ರಿ ಸಿಬ್ಬಂದಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;&lt;h2&gt;ರೈಲ್ವೆ ಇಲಾಖೆಗೆ ತಲೆನೋವಾದ ಅಕ್ರಮ ವೆಂಡರ್ಸ್ ಹಾವಳಿ&lt;/h2&gt;&lt;p&gt;ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್ (IRCTC) ಅಧಿಕಾರಿಗಳ ಪ್ರಕಾರ, ರೈಲುಗಳಲ್ಲಿ ಅಧಿಕೃತ ಪರವಾನಗಿ ಇಲ್ಲದೆ ನುಗ್ಗುವ ಅಕ್ರಮ ಮಾರಾಟಗಾರರ ಹಾವಳಿ ಇತ್ತೀಚಿನ ದಿನಗಳಲ್ಲಿ ಅತಿಯಾಗಿದೆ. ಇದು ಕೇವಲ ಇಲಾಖೆಯ ಆದಾಯಕ್ಕೆ ನಷ್ಟವನ್ನುಂಟು ಮಾಡುತ್ತಿಲ್ಲ, ಬದಲಿಗೆ ಪ್ರಯಾಣಿಕರ ಹಾಗೂ ಸಿಬ್ಬಂದಿಯ ಸುರಕ್ಷತೆಗೂ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಇದನ್ನು ತಡೆಯಲು ದೇಶಾದ್ಯಂತ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ತಿಂಗಳ ಆರಂಭದಲ್ಲೇ ಅಕ್ರಮವಾಗಿ ಟಿಕೆಟ್ ಹಾಗೂ ಸೇವೆಗಳನ್ನು ಒದಗಿಸುತ್ತಿದ್ದ 14 ವೆಬ್&zwnj;ಸೈಟ್&zwnj;ಗಳನ್ನು ಐಆರ್&zwnj;ಸಿಟಿಸಿ ಮುಟ್ಟುಗೋಲು ಹಾಕಿಕೊಂಡಿದೆ.&lt;/p&gt;&lt;p&gt;ಮತ್ತೊಂದೆಡೆ, ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದಲ್ಲಿ (SWR) ಮೇ ತಿಂಗಳಿನಲ್ಲಿಯೇ ಅಕ್ರಮ ವ್ಯಾಪಾರಿಗಳ ವಿರುದ್ಧ ಬೃಹತ್ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದ ಮೂಲಕ ರೈಲಿನಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದವರಿಂದ ಬರೋಬ್ಬರಿ 1.5 ಲಕ್ಷ ರೂಪಾಯಿಗಳಿಗೂ ಅಧಿಕ ದಂಡ ವಸೂಲಿ ಮಾಡಲಾಗಿತ್ತು. ಆದಾಗ್ಯೂ, ಇಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ಗ್ಯಾಂಗ್&zwnj;ಗಳು ರೈಲುಗಳೊಳಗೆ ಮಾರಾಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿರುವುದು ಈಗ ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿದೆ. ರೈಲ್ವೆ ಭದ್ರತಾ ಪಡೆ (RPF) ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂಬ ಆಗ್ರಹ ಕೇಳಿಬರುತ್ತಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bengaluru-delhi-train-pantry-staff-stabbed-by-illegal-vendors-in-yesvantpur-hazrat-nizamuddin-sampark-kranti-express-gdp/articleshow-r43u5b3"/>
        </item>
        <item>
            <title><![CDATA[Yashodhara Vaddar Death: ತರಬೇತಿ ವೇಳೆ ಗುಂಡು ತಗುಲಿ ಹಾನಗಲ್ಲ ಮೂಲದ ನೌಕಪಡೆಯ ಯೋಧ ಸಾವು]]></title>
            <link>https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y</link>
            <guid isPermaLink="true">https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y</guid>
            <pubDate>Sat, 04 Jul 2026 06:02:36 +0530</pubDate>
            <description><![CDATA[&lt;p&gt;Yashodhara Vaddar Death ಕೇರಳದ ಕೊಚ್ಚಿಯಲ್ಲಿ ನೌಕಾಪಡೆಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಯೋಧರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwn7wmj5nrzrjg5s7fcsxsgr,imgname-----------------------2026-07-04t054841.711-1783124349509.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾನಗಲ್ಲ(ಹಾವೇರಿ) (ಜು.4): &lt;/strong&gt;ಕೇರಳದ ಕೊಚ್ಚಿಯಲ್ಲಿ ನೌಕಾಪಡೆಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಯೋಧರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ.&amp;nbsp;&lt;/p&gt;&lt;p&gt;ಯಶೋಧರ ವಡ್ಡರ (29)(Yashodhara Vaddar Death) ಮೃತ ಯೋಧ. ಅಂಡಮಾನ್&zwnj;ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಯಶೋಧರ ಕಳೆದ 3 ತಿಂಗಳಿನಿಂದ ಕೊಚ್ಚಿಯಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಾಗಿ ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿದ್ದರು. 2016ರಲ್ಲಿ ಭಾರತೀಯ ನೌಕಾಪಡೆಯ ಯೋಧರಾಗಿ ಯಶೋಧರ ನೇಮಕಗೊಂಡಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಮೌಂಟ್ ಎವರೆಸ್ಟ್&zwnj;ನಲ್ಲಿ ಯೋಧನ 'ಗ್ರೀನ್ ಬೂಟ್' ರಹಸ್ಯ ಬಯಲು; ಪರ್ವತಾರೋಹಿಗಳ ದಿಕ್ಸೂಚಿಗೆ 30 ವರ್ಷದ ಬಳಿಕ ಮುಕ್ತಿ!&lt;/p&gt;&lt;p&gt;ಕರ್ತವ್ಯ ನಿರ್ವಹಣೆ ವೇಳೆ ಯೋಧ ಯಶೋಧರ ಗುಂಡು ತಾಗಿ ಮೃತಪಟ್ಟಿದ್ದಾರೆ.ಉಪ್ಪುಣಸಿಗೆ ಯೋಧನ ಪಾರ್ಥೀವ ಶರೀರ ಶನಿವಾರ ಆಗಮಿಸಲಿದೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರಕ್ಕಾಗಿ ಎಲ್ಲ ಸಿದ್ಧತೆ ನಡೆದಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y"/>
        </item>
        <item>
            <title><![CDATA[ನಿಧಿ ಆಸೆಗಾಗಿ ಮೂಕಬಸವೇಶ್ವರ, ಈಶ್ವರ ಮೂರ್ತಿಯುಳ್ಳ ದೇವಸ್ಥಾನ ಕೆಡವಿದ ನಾಲ್ವರ ಬಂಧನ]]></title>
            <link>https://kannada.asianetnews.com/karnataka-districts/haveri-savanuru-four-arrested-for-demolishing-a-temple-with-idols-of-mookabasaveshwara-ishwara-for-sake-of-wealth-mrq/articleshow-vsg4yvz</link>
            <guid isPermaLink="true">https://kannada.asianetnews.com/karnataka-districts/haveri-savanuru-four-arrested-for-demolishing-a-temple-with-idols-of-mookabasaveshwara-ishwara-for-sake-of-wealth-mrq/articleshow-vsg4yvz</guid>
            <pubDate>Thu, 11 Jun 2026 08:05:21 +0530</pubDate>
            <description><![CDATA[&lt;p&gt;ನಿಧಿ ಆಸೆಗಾಗಿ ಪುರಾತನ ಮೂಕಬಸವೇಶ್ವರ ಹಾಗೂ ಈಶ್ವರ ದೇವಸ್ಥಾನವನ್ನು ಕೆಡವಿ, ಜೆಸಿಬಿಯಿಂದ ನೆಲ ಅಗೆದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktt8gb9ee4g72a076rq7e565,imgname-haveri-temple-1781145283886.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ನಿಧಿ ಆಸೆಗಾಗಿ ಮೂಕಬಸವೇಶ್ವರ ಹಾಗೂ ಈಶ್ವರ ಮೂರ್ತಿ ಇರುವ ಕಲ್ಲಿನ ದೇವಸ್ಥಾನವನ್ನು ಕೆಡವಿ ನೆಲವನ್ನು ಅಗೆದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಘಟನೆ ಸವಣೂರು ತಾಲೂಕಿನ ನದಿನೀರಲಗಿ ಗ್ರಾಮದಲ್ಲಿ ನಡೆದಿದೆ.&lt;/p&gt;&lt;p&gt;ನದಿನೀರಲಗಿ ಗ್ರಾಮದ ಫಕ್ಕಿರಪ್ಪ ಮಾದರ ಅವರ ಜಮೀನಿನಲ್ಲಿರುವ ಮೂಕಬಸವೇಶ್ವರ ಮತ್ತು ಈಶ್ವರಮೂರ್ತಿ ಇರುವ ಸಣ್ಣ ಕಲ್ಲಿನ ದೇವಸ್ಥಾನವನ್ನು ನಿಧಿ ಆಸೆಯ ಸಲುವಾಗಿ ಕೆಡವಿ ಧ್ವಂಸ ಮಾಡಲಾಗಿದೆ ಎಂದು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.&lt;/p&gt;&lt;h2&gt;&lt;strong&gt;ಬಂಧಿತರು ಯಾರು?&lt;/strong&gt;&lt;/h2&gt;&lt;p&gt;ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಯುನಿಸಖಾನ್ ಮಹಬೂಬಖಾನ್ ಕುಲಕರ್ಣಿ, ನೂರಅಹ್ಮದ ಯುನಿಸಖಾನ್ ಕುಲಕರ್ಣಿ, ಮುಂಡಗೋಡದ ಮುಸ್ತಾಕಅಹ್ಮದ ಇಮಾಮಖಾನ್ ದುಂಡಸಿ, ದೇವಿಹೊಸೂರಿನ ಆಸೀಪ್ ಮಕ್ಬುಲಸಾಬ ಯಲವಗಿ ಎಂಬುದವರು ಹೊಲದಲ್ಲಿರುವ ದೇವಸ್ಥಾನದಲ್ಲಿನ ಮೂರ್ತಿಗಳನ್ನು ಪಕ್ಕಕ್ಕೆ ಸರಿಸಿ ಅದರ ಕೆಳಗಡೆಯ ನೆಲವನ್ನು ಜೆಸಿಬಿಯಿಂದ ಗುಂಡಿ ತೊಡಿ, ಹಿಂದೂ ಧರ್ಮದ ಪೂಜಾ ಸ್ಥಳಕ್ಕೆ ಹಾನಿಯುಂಟು ಮಾಡಿ, ಧಾರ್ಮಿಕ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದ ಆರೋಪದಡಿ ಬಂಧಿಸಲಾಗಿದೆ.&lt;/p&gt;&lt;p&gt;ಈ ಕುರಿತು ತನಿಖೆ ನಡೆಸಿ ಆರೋಪಗಳ ಪತ್ತೆಗಾಗಿ ಎಸ್ಪಿ ಯಶೋದಾ ವಂಟಗೋಡಿ, ಎಎಸ್ಪಿ ಲಕ್ಷ್ಮಣ ಶಿರಕೋಳ, ಡಿಎಸ್ಪಿ ಗುರುಶಾಂತಪ್ಪ ಕೆ.ವಿ., ಅವರ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ತನಿಖಾ ತಂಡವು ವಿವಿಧ ಆಯಾಮಗಳಲ್ಲಿ ತನಿಖಾ ಕಾರ್ಯಗಳನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನಿಧಿ ಆಸೆಗಾಗಿ ಚಾಲುಕ್ಯರ ಕಾಲದ ದೇಗುಲ ಧ್ವಂಸ; ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಾಸನ ಪತ್ತೆ&lt;/strong&gt;&lt;/p&gt;&lt;p&gt;ಈ ಪತ್ತೆ ಕಾರ್ಯದಲ್ಲಿ ಸಿಪಿಐ ತಿಮ್ಮಣ್ಣ ಎಸ್.ಚಾಮನೂರ, ಪಿಎಸ್&zwnj;ಐ ರಂಗನಾಥ ಅಂತರಗಟ್ಟಿ, ಸಂಗನಗೌಡ ಪೋಲಿಸಗೌಡ್ರ ಠಾಣೆಯ ಸಿಬ್ಬಂದಿಗಳಾದ ಆರ್.ಎನ್. ಪೂಜಾರ, ಬಿ.ಎನ್. ಆವೋಜಿ, ಮಂಜುನಾಥ ಮಣ್ಣಿಯವರ, ಮಹೇಶ ಕೆಲೂರ, ಎ.ಎಚ್. ನದಾಫ್, ಅನೀಲ ಮಲ್ಲಾಡದ, ಆರ್.ಎನ್. ಕನವಳ್ಳಿ, ತಾಂತ್ರಿಕ ಸಿಬ್ಬಂದಿಗಳಾದ ಮಾರುತಿ ಹಾಲಭಾವಿ, ಸತೀಶ ಮಾರಕಟ್ಟಿ ಅವರು ಪಾಲ್ಗೊಂಡಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಲಕ್ಕುಂಡಿ ಹಳೇ ಹಂಡೆಯಲ್ಲಿ ಗೋಲ್ಡನ್ ಕವರ್ ಚಾಕ್ಲೆಟ್ ಹಾಕಿ 22 ಲಕ್ಷ ದೋಚಿದ್ದ ಮೌಲ್ವಿ ಅರೆಸ್ಟ್&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-savanuru-four-arrested-for-demolishing-a-temple-with-idols-of-mookabasaveshwara-ishwara-for-sake-of-wealth-mrq/articleshow-vsg4yvz"/>
        </item>
    </channel>
</rss>
