<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 05 Jun 2026 04:29:06 +0530</lastBuildDate>
        <atom:link href="https://kannada.asianetnews.com/rss/haveri" rel="self" type="application/rss+xml"/>
        <item>
            <title><![CDATA[ಉಪಚುನಾವಣೆ ಫಲಿತಾಂಶ 2028ಕ್ಕೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ದಿಕ್ಸೂಚಿ: ಸಲೀಂ ಅಹ್ಮದ್]]></title>
            <link>https://kannada.asianetnews.com/politics/saleem-ahmed-congress-2028-election-confidence-haveri-gvd/articleshow-1718a3h</link>
            <guid isPermaLink="true">https://kannada.asianetnews.com/politics/saleem-ahmed-congress-2028-election-confidence-haveri-gvd/articleshow-1718a3h</guid>
            <pubDate>Sat, 09 May 2026 22:56:06 +0530</pubDate>
            <description><![CDATA[&lt;p&gt;ಉಪ ಚುನಾವಣೆಗಳಲ್ಲಿ ಜನರು ನಮಗೆ ಆಶೀರ್ವಾದ ಮಾಡಿದ್ದು, 2028ಕ್ಕೆ ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಇದು ದಿಕ್ಸೂಚಿಯಾಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g2m1ancat090bwxmywwna2y0,imgname-saleem-ahmed.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮೇ.09): &lt;/strong&gt;ಇತ್ತೀಚೆಗೆ ನಡೆದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಜನರು ನಮಗೆ ಆಶೀರ್ವಾದ ಮಾಡಿದ್ದು, 2028ಕ್ಕೆ ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಇದು ದಿಕ್ಸೂಚಿಯಾಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ಈ ಫಲಿತಾಂಶ ಮುಂದಿನ 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದಿದ್ದರು.&lt;/p&gt;&lt;p&gt;ಆದರೆ ರಾಜ್ಯದಲ್ಲಿ ನಡೆದ ಎಲ್ಲ ಉಪಚುನಾವಣೆಗಳಲ್ಲೂ ನಾವೇ ಗೆದ್ದಿದ್ದೇವೆ. ಅವರದೇ ಮಾತಿನಂತೆ ಈ ಫಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಾಯಕತ್ವದ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿವೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ನಮಗೆ ಜವಾಬ್ದಾರಿ ಕೊಟ್ಟಿದ್ದರು. ಆ ಕೆಲಸವನ್ನು ನಾವು ಮಾಡಿದ್ದೇವೆ.&lt;/p&gt;&lt;p&gt;ದಾವಣಗೆರೆಯಲ್ಲಿ 35 ಸಾವಿರ ಅಲ್ಪಸಂಖ್ಯಾತರು ಕಾಂಗ್ರೆಸ್&zwnj;ಗೆ ವೋಟು ಹಾಕಿದ್ದು, ಅಲ್ಪಸಂಖ್ಯಾತರ ಜತೆಗೆ ಎಲ್ಲ ಸಮುದಾಯದ ಮತದಾರರು ನಮಗೆ ವೋಟು ಹಾಕಿದ್ದಾರೆ. 2028ರಲ್ಲಿ ಮತ್ತೆ ನಾವೇ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು. ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಯವರು ಸಂಪೂರ್ಣ ಗ್ಯಾರಂಟಿಗಳನ್ನು ನಿಲ್ಲಿಸಿ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ ಸಲೀಂ, ರಾಜ್ಯದಲ್ಲಿ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಆಗುತ್ತಿದೆ. ಮುಂದೆಯೂ ರಾಜ್ಯದ ಜನರು ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;&lt;strong&gt;ಷಡ್ಯಂತ್ರ ಮಾಡಿ ಗೆಲುವು...&lt;/strong&gt;&lt;/p&gt;&lt;p&gt;2023ರ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ನಾವು ಗೆದ್ದಿದ್ದೆವು. ಆದರೆ ಷಡ್ಯಂತ್ರ ಮಾಡಿ ಈಗ ಬಿಜೆಪಿ ಗೆಲ್ಲಿಸಿದ್ದಾರೆ. ಮರು ಎಣಿಕೆ ಮಾಡಲು ಕೋರ್ಟ್ ಆದೇಶಿಸಿತ್ತು. ಮತ ಎಣಿಕೆ ಮಾಡಿ ಕೋರ್ಟ್&zwnj;ಗೆ ಫಲಿತಾಂಶ ನೀಡಬೇಕಿತ್ತು. ಆದರೆ, ಬಹಿರಂಗವಾಗಿ ಫಲಿತಾಂಶ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ನಾವು ಕಾನೂನು ಹೋರಾಟ ಮಾಡುತ್ತೇವೆ. ಬ್ಯಾಲೆಟ್ ಪೇಪರ್&zwnj; ತಿದ್ದಿ ಸೋತವರನ್ನು ಗೆಲ್ಲಿಸಿದ್ದು, ಬಿಜೆಪಿ ವೋಟು ಚೋರಿ ಪಾರ್ಟಿ ಎಂದು ಟೀಕಿಸಿದರು. ಬೆಂಗಳೂರು ಸೆಂಟ್ರಲ್&zwnj;ನಲ್ಲಿ ಮತ ಕಳ್ಳತನ ಮಾಡಿರುವುದನ್ನು ನಾವು ತೋರಿಸಿದ್ದೆವು. ಮತ ಎಣಿಕೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳಿರುತ್ತವೆ. ಅವುಗಳನ್ನು ತೆಗೆದು ನೋಡಬೇಕು. ಷಡ್ಯಂತ್ರ ಮಾಡಿ ಬಿಜೆಪಿ ಗೆಲ್ಲಿಸಿದ್ದಾರೆ ಎಂದು ದೂರಿದರು.&lt;/p&gt;&lt;p&gt;&lt;strong&gt;ರಾಜ್ಯಪಾಲರಿಂದ ರಾಜಕೀಯ...&lt;/strong&gt;&lt;/p&gt;&lt;p&gt;ತಮಿಳುನಾಡಿನಲ್ಲಿ ದೊಡ್ಡಪಕ್ಷವಾಗಿ ಹೊರ ಹೊಮ್ಮಿರುವ ವಿಜಯ್&zwnj; ಅವರಿಗೆ ಸರ್ಕಾರ ಅವಕಾಶ ನೀಡದೇ ರಾಜ್ಯಪಾಲರು ರಾಜಕಾರಣ ಮಾಡಿ ಅತಂತ್ರ ಮಾಡಿದ್ದಾರೆ. ರಾಜ್ಯಪಾಲರು ದೊಡ್ಡ ಪಕ್ಷವನ್ನು ಕರೆದು ಬಹುಮತ ಸಾಬೀತಿಗೆ ಅವಕಾಶ ಕೊಡಬೇಕಿತ್ತು. ಆದರೆ, ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಅವಕಾಶ ಕೊಡದೆ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ರಾಜ್ಯಪಾಲರ ಕೆಲಸ ರಾಜಕೀಯ ಪ್ರೇರಿತವಾಗಿದೆ. ವಿಜಯ ಅವರನ್ನು ಸಿಎಂ ಮಾಡಬಾರದು ಎಂಬುದು ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಕಿಡಿಕಾರಿದರು.&lt;/p&gt;&lt;h2&gt;&lt;strong&gt;ಸಂಪುಟ ಪುನಾರಚನೆ..&lt;/strong&gt;&lt;/h2&gt;&lt;p&gt;ಬಹುಶಃ ಈ ತಿಂಗಳಲ್ಲಿ ಸಂಪುಟ ಪುನಾರಚನೆ ಆಗಬಹುದು. ಸಿಎಂ, ಡಿಸಿಎಂ ಸೇರಿದಂತೆ ಹೈಕಮಾಂಡ್ ನಾಯಕರು ಸೇರಿ ಅಂತಿಮ ತೀರ್ಮಾನ ಮಾಡುತ್ತಾರೆ. ಆದಷ್ಟು ಬೇಗ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಹುಮತವನ್ನು ರಾಜಭವನದಲ್ಲಿ ಸಾಬೀತು ಪಡಿಸಬೇಕಿಲ್ಲ, ಚುನಾವಣೆಯಲ್ಲಿ ಗೆದ್ದಿರುವ ದೊಡ್ಡ ಪಕ್ಷವನ್ನು ಕರೆದು ಸರ್ಕಾರ ರಚಿಸಲು ಅವಕಾಶ ಕೊಟ್ಟು, ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ತೀರ್ಪು ನೀಡಿದೆ. ಆ ಪ್ರಕಾರ ತಮಿಳುನಾಡು ರಾಜ್ಯಪಾಲರು ನಡೆದುಕೊಳ್ಳಬೇಕು ಎಂದು ವಿಪ ಮುಖ್ಯಸಚೇತಕ ಸಲೀಂ ಅಹ್ಮದ್&zwnj; ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/saleem-ahmed-congress-2028-election-confidence-haveri-gvd/articleshow-1718a3h"/>
        </item>
        <item>
            <title><![CDATA[ಆಘಾತಕಾರಿ! ಏನಾಗಿದೆ ಯುವ ಸಮೂಹಕ್ಕೆ? ಕನ್ಯೆ ಸಿಗಲಿಲ್ಲವೆಂದು ಯುವಕ ದುರಂತ ಅಂತ್ಯ, ಬಿಎಸ್ಸಿಯಲ್ಲಿ ಒಂದು ವಿಷಯ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೂ ಜೀವ ಕಳೆದುಕೊಂಡಳು!]]></title>
            <link>https://kannada.asianetnews.com/karnataka-districts/two-shocking-tragedies-haveri-young-man-dies-over-marriage-setback-hassan-student-found-dead-after-fail-bsc-rav/articleshow-3w4ioy1</link>
            <guid isPermaLink="true">https://kannada.asianetnews.com/karnataka-districts/two-shocking-tragedies-haveri-young-man-dies-over-marriage-setback-hassan-student-found-dead-after-fail-bsc-rav/articleshow-3w4ioy1</guid>
            <pubDate>Fri, 05 Jun 2026 04:26:27 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮದುವೆಗೆ ಕನ್ಯೆ ಸಿಗದಿದ್ದಕ್ಕೆ ಯುವಕನೊಬ್ಬ ಆತ್ಮ೧ಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಂದು ಪ್ರಕರಣದಲ್ಲಿ, ಹಾಸನದ ಹೊಳೆನರಸೀಪುರದಲ್ಲಿ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ktad9jh06mxxkpq1jbdxev0d,imgname-----------------------2026-06-05t042011.797-1780613433888.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜೂ.5):&lt;/strong&gt; ಮದುವೆಗೆ ಕನ್ಯೆ ಸಿಗದಿದ್ದಕ್ಕೆ ಬೇಸತ್ತು ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ೧ಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಮ್ಯಾಗೇರಿ ಓಣಿ ನಿವಾಸಿ ಮನೋಜ ಬಸವರಾಜ ಹಡಪದ(Manoj Basavaraj Hadapad) (27) ಮೃತ ಯುವಕ. ಈತ ಸಲೂನ್&zwnj; ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ. ಹಲವು ದಿನಗಳಿಂದ ನಾನಾ ಕಡೆ ಕನ್ಯೆ ಹುಡುಕಿದರೂ ಯಾರೂ ಸಿಕ್ಕಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದಿದ್ದ. ಬುಧವಾರ ಅಡುಗೆಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.&lt;/p&gt;&lt;p&gt;ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ&lt;/p&gt;&lt;h2&gt;ಬಿಎಸ್ಸಿಯಲ್ಲಿ 1 ವಿಷಯ ಫೇಲ್&zwnj; ಆಗಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ&lt;/h2&gt;&lt;p&gt;ಇನ್ನೊಂದೆಡೆ ಹೊಳೆನರಸೀಪುರ(ಹಾಸನ ಬಿಎಸ್&zwnj;ಸ್ಸಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮ೧ಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಹಳಿಯೂರು ಗ್ರಾಮದ ಶ್ರೀರಕ್ಷಾ (21) ಮೃತ ವಿದ್ಯಾರ್ಥಿನಿ.&lt;/p&gt;&lt;p&gt;ಇವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್ಸಿಯಲ್ಲಿ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, 2 ವರ್ಷದಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಇದ್ದರು. ಒಂದು ವಿಷಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ನಗರ ಪೊಲೀಸ್&zwnj; ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/two-shocking-tragedies-haveri-young-man-dies-over-marriage-setback-hassan-student-found-dead-after-fail-bsc-rav/articleshow-3w4ioy1"/>
        </item>
        <item>
            <title><![CDATA[ಬೆಂಗಳೂರು ಮುಂಬೈ ನಡುವೆ ಹೊಸ ದ್ವಿಸಾಪ್ತಾಹಿಕ ಎಕ್ಸಪ್ರೆಸ್‌ ರೈಲು ಆರಂಭ, ಸಚಿವ ಜೋಶಿ ಚಾಲನೆ, ವೇಳಾಪಟ್ಟಿ ಇಲ್ಲಿದೆ]]></title>
            <link>https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</link>
            <guid isPermaLink="true">https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8</guid>
            <pubDate>Sun, 17 May 2026 20:29:20 +0530</pubDate>
            <description><![CDATA[ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಹೊಸ ದ್ವಿಸಪ್ತಾಹಿಕ ವಿಶೇಷ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ. ಈ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸಲು ಹೆಚ್ಚು ಅನುಕೂಲಕರವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01krv6zk5wx9t8zxpzhr580ac2,imgname-pralhad-joshi-flags-off-train-1779029757116.jpg" type="image/jpeg" height="390" width="690"/>
            <content:encoded><![CDATA[&lt;p&gt;ಹುಬ್ಬಳ್ಳಿ: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಲ್&zwnj;, ಮುಂಬೈ ನಡುವೆ ಹುಬ್ಬಳ್ಳಿ ಮುಖಾಂತರ ಸಂಚರಿಸುವ ನೂತನ ವಿಶೇಷ ರೈಲಿಗೆ (06557) ಮೇ 17ರಂದು ಸಂಜೆ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ತೋರಿದರು.&lt;/p&gt;&lt;h2&gt;ಯಾವ ಊರೆಲ್ಲ ಹಾದು ಹೋಗಲಿದೆ?&lt;/h2&gt;&lt;p&gt;ಬೆಂಗಳೂರಿನಿಂದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ಮುಂಬೈಗೆ ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಸಂಚರಿಸುವಂತೆ ಜೋಶಿ ಮನವಿ ಮೇರೆಗೆ ಈ ರೈಲಿಗೆ ಅನುಮೋದನೆ ನೀಡಲಾಗಿತ್ತು. ಈ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ರೈಲು ಮಾರ್ಗದ (16553/16554) ಮೇ 23ರಿಂದ ಬೆಂಗಳೂರು ಮತ್ತು ಮೇ 24ರಿಂದ ಮುಂಬೈನಿಂದ ಪ್ರಾರಂಭವಾಗಲಿದೆ.&lt;/p&gt;&lt;h2&gt;ಯಾವಾಗ ಎಲ್ಲಿಂದ ಹೊರಡಲಿದೆ?&lt;/h2&gt;&lt;p&gt;ಪ್ರತಿ ಶನಿವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಪ್ರತಿ ಭಾನುವಾರ ಮತ್ತು ಬುಧವಾರ ಮುಂಬೈನಿಂದ ರೈಲು ಸಂಚರಿಸಲಿದೆ. ಈ ಹೊಸ ರೈಲು ಸೇವೆಯು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಭಾಗದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಉದ್ಯೋಗ, ಶಿಕ್ಷಣ ಮತ್ತು ಪ್ರವಾಸೋದ್ಯಮಕ್ಕಾಗಿ ಮುಂಬೈ ಹಾಗೂ ಪುಣೆಗೆ ಪ್ರಯಾಣಿಸುವವರಿಗೆ ವರದಾನವಾಗಲಿದೆ.&lt;/p&gt;&lt;p&gt;ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರಧಾನಮಂತ್ರಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತೀಯ ರೈಲ್ವೆ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುತ್ತಿದ್ದು, ನೂತನ ರೈಲು ಸೇವೆಗಳ ಮೂಲಕ ಸಾಮಾನ್ಯ ಜನರ ಪ್ರಯಾಣ ಸುಗಮ, ಸುರಕ್ಷಿತ ಹಾಗೂ ವೇಗದಾಯಕವಾಗುತ್ತಿದೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯವನ್ನು ಬಲಪಡಿಸಲು ನಮ್ಮಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯದ ಪ್ರತಿಯೊಂದು ಯೋಜನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ,ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರಿಗೆ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;p&gt;ಹುಬ್ಬಳ್ಳಿ ಮುಖಾಂತರ ಸಂಪರ್ಕದ ಹೊಸ ಕ್ರಾಂತಿ!&amp;nbsp;ಬೆಂಗಳೂರು ಮತ್ತು ಮುಂಬೈ ನಡುವೆ ಹುಬ್ಬಳ್ಳಿಯ ಮೂಲಕ ಹೊಸ ದ್ವಿಸಪ್ತಾಹಿಕ ಎಕ್ಸ್&zwnj;ಪ್ರೆಸ್ ರೈಲು ಪ್ರಾರಂಭ.ಇಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಲೋಕಮಾನ್ಯ ತಿಲಕ್ ಟರ್ಮಿನಸ್, ಮುಂಬೈ ನಡುವೆ&hellip; pic.twitter.com/NddQEBPea4&lt;/p&gt;&lt;p&gt;&mdash; Pralhad Joshi (@JoshiPralhad) May 17, 2026&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/new-bengaluru-mumbai-superfast-train-via-hubballi-flagged-off-by-union-minister-pralhad-joshi-gdp/articleshow-4w8k9e8"/>
        </item>
        <item>
            <title><![CDATA[Haveri: ಇಂದು ಎಂಗೇಜ್​​ಮೆಂಟ್,​ ರಾತ್ರಿಯೇ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ದೂರು!]]></title>
            <link>https://kannada.asianetnews.com/gallery/karnataka-districts/haveri-24-year-old-woman-goes-missing-from-home-the-day-before-her-engagement-mrq-889yb7r</link>
            <guid isPermaLink="true">https://kannada.asianetnews.com/gallery/karnataka-districts/haveri-24-year-old-woman-goes-missing-from-home-the-day-before-her-engagement-mrq-889yb7r</guid>
            <pubDate>Sun, 26 Apr 2026 11:09:36 +0530</pubDate>
            <description><![CDATA[ಹಾವೇರಿ ಜಿಲ್ಲೆಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನವೇ 24 ವರ್ಷದ ಯುವತಿ ಮನೆಯಿಂದ ಕಾಣೆಯಾಗಿದ್ದಾರೆ. ಬೇರೆ ಸಮುದಾಯದ ಯುವಕ ಇಬ್ರಾಹಿಂ ಎಂಬಾತ ಆಕೆಯನ್ನು ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಇದೊಂದು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kq449y92xambk0anj5dmsyzy,imgname-love-jihad-1777181456674.jpg" type="image/jpeg" height="390" width="690"/>
            <content:encoded><![CDATA[ಹಾವೇರಿ ಜಿಲ್ಲೆಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನವೇ 24 ವರ್ಷದ ಯುವತಿ ಮನೆಯಿಂದ ಕಾಣೆಯಾಗಿದ್ದಾರೆ. ಬೇರೆ ಸಮುದಾಯದ ಯುವಕ ಇಬ್ರಾಹಿಂ ಎಂಬಾತ ಆಕೆಯನ್ನು ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಇದೊಂದು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.&lt;img&gt;&lt;p&gt;ನಿಶ್ಚಿತಾರ್ಥಕ್ಕೂ ಮೊದಲೇ ಯುವತಿ ಮನೆಯಿಂದ ಕಾಣೆಯಾಗಿರುವ ಪ್ರಕರಣ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ (24) ಕೆರಿಮೆತ್ತಿಹಳ್ಳಿ ಎಂಬ ಯುವತಿಯ ನಿಶ್ಚಿತಾರ್ಥ ಇಂದು ನಿಶ್ಚಯವಾಗಿತ್ತು.&lt;/p&gt;&lt;img&gt;&lt;p&gt;ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬಾತ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಶಂಕರಮ್ಮ ಪೋಷಕರು ಆರೋಪಿಸಿದ್ದಾರೆ. ಬಿಕಾಂ ಪದವಿ ಪಡೆದುಕೊಂಡ ಬಳಿಕ ಶಂಕರಮ್ಮ ಅಕ್ಕಿಆಲೂರಿಗೆ ಕೆಲಸಕ್ಕೆ ಹೋಗ್ತಿದ್ದರು. ಈ ವೇಳೆ ಇಬ್ರಾಹಿಂನ ಪರಿಚಯವಾಗಿದೆ ಎಂದು ಹೇಳಲಾಗುತ್ತಿದೆ.&lt;/p&gt;&lt;img&gt;&lt;p&gt;ಮೇ 11ರಂದು ಶಂಕರಮ್ಮಾಳ ಮದುವೆ ನಿಗದಿ ಮಾಡಲಾಗಿತ್ತು. ಇಂದು ನಿಶ್ಚಿತಾರ್ಥ ಫಿಕ್ಸ್ ಮಾಡಲಾಗುತ್ತಿತ್ತು. ನಿನ್ನೆ ರಾತ್ರಿ ಮನೆ ಹಿಂಬದಿ ಬಾಗಿಲಿನಿಂದ ಬಂದು ಶಂಕರಮ್ಮನ್ನು ಕರೆದುಕೊಂಡು ಹೋಗಿರುವ ಆರೋಪ ಕೇಳಿ ಬಂದಿದೆ. ಪರಿಚಯವನ್ನೇ ತನ್ನ ಲಾಭಕ್ಕೆ ಇಬ್ರಾಹಿಂ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗುತ್ತಿ&lt;/p&gt;&lt;img&gt;&lt;p&gt;ಇದೀಗ ಶಂಕರಮ್ಮ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಮ್ಮ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದೊಂದು ಲವ್&zwnj; ಜಿಹಾದ್ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಯುವಕ ಇಬ್ರಾಹಿಂ ಬಂಧನಕ್ಕೆ ಆಗ್ರಹಿಸಿವೆ.&lt;/p&gt;]]></content:encoded>
            <category>haveri</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/haveri-24-year-old-woman-goes-missing-from-home-the-day-before-her-engagement-mrq-889yb7r"/>
        </item>
        <item>
            <title><![CDATA[ನೋಡ ನೋಡ್ತಿದ್ದಂತೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್]]></title>
            <link>https://kannada.asianetnews.com/gallery/karnataka-districts/haveri-fire-breaks-out-in-ksrtc-pallakki-bus-going-from-bengaluru-to-gadag-mrq-9kxurpe</link>
            <guid isPermaLink="true">https://kannada.asianetnews.com/gallery/karnataka-districts/haveri-fire-breaks-out-in-ksrtc-pallakki-bus-going-from-bengaluru-to-gadag-mrq-9kxurpe</guid>
            <pubDate>Tue, 05 May 2026 08:30:51 +0530</pubDate>
            <description><![CDATA[ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್&zwnj;ಆರ್&zwnj;ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್&zwnj;ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqv109p4wcdd4seb3etsxaq8,imgname-haveri-ksrtc-pallakkai-bus-fire--4--1777949746884.jpg" type="image/jpeg" height="390" width="690"/>
            <content:encoded><![CDATA[ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್&zwnj;ಆರ್&zwnj;ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್&zwnj;ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.&lt;img&gt;&lt;p&gt;ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್&zwnj;ಆರ್&zwnj;ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್&zwnj;ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್&zwnj;ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಸ್&zwnj;ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಪಕ್ಕೀರಪ್ಪ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.&lt;/p&gt;&lt;img&gt;&lt;p&gt;ಆರಂಭದಲ್ಲಿ ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್&zwnj;ನ್ನು ಆವರಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಪಲ್ಲಕ್ಕಿ ಬಸ್ ಬೆಂಕಿಗಾಹುತಿಯಾಗಿದೆ.&lt;/p&gt;&lt;img&gt;&lt;p&gt;ಇನ್ನು ವಿಷಯ ತಿಳಿಯುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೆಯೇ ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾರೆ. ಬಸ್&zwnj;ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾಕೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;]]></content:encoded>
            <category>haveri</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/haveri-fire-breaks-out-in-ksrtc-pallakki-bus-going-from-bengaluru-to-gadag-mrq-9kxurpe"/>
        </item>
        <item>
            <title><![CDATA[ಮೇ.4ರ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತೋ ಗೊತ್ತಿಲ್ಲ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/karnataka-districts/basavaraj-bommai-exit-poll-karnataka-cm-change-statement-gvd/articleshow-c08vabo</link>
            <guid isPermaLink="true">https://kannada.asianetnews.com/karnataka-districts/basavaraj-bommai-exit-poll-karnataka-cm-change-statement-gvd/articleshow-c08vabo</guid>
            <pubDate>Fri, 01 May 2026 21:46:25 +0530</pubDate>
            <description><![CDATA[&lt;p&gt;ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ, ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೊ ಗೊತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jwdwfcf3djzfnw4160qtr78v,imgname-basavaraj-bommai--2--1748517761507.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮೇ.01):&lt;/strong&gt; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ, ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೊ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಪಂಚರಾಜ್ಯ ಚುನಾವಣೆಗಳ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯಿಸಿದರು.&lt;/p&gt;&lt;p&gt;ಆಸ್ಸಾಂನಲ್ಲಿ ಮೂರನೇ ಎರಡರಷ್ಟು ಬಹುಮತ ನಮಗೆ ಬರಲಿದೆ. ನಮ್ಮ ನಿರೀಕ್ಷೆಯಂತೆ ಎಕ್ಸಿಟ್ ಪೋಲ್ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯವರು ಎಷ್ಟೇ ಸಮಸ್ಯೆ ಮಾಡಲಿ, ಏನೇ ಹಿಂಸೆ ಕೊಡಲಿ, ಜನ ಬದಲಾವಣೆ ಬಯಸಿದ್ದಾರೆ. ಅಲ್ಲಿನ ಜನ ಶೇ. 90ರಷ್ಟು ಮತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳ ಫಲಿತಾಂಶ ದೇಶಕ್ಕೆ ದಿಕ್ಸೂಚಿ ಆಗಲಿದೆ. ಪಂಚರಾಜ್ಯ ಫಲಿತಾಂಶ ದೇಶಾದ್ಯಂತ ಬಿಜೆಪಿ ಸಾಧನೆಯ ಹೆಜ್ಜೆ ಆಗಿದೆ ಎಂದು ಹೇಳಿದರು.&lt;/p&gt;&lt;p&gt;&lt;strong&gt;ಸರ್ಕಾರ ಸತ್ತಿದೆ:&lt;/strong&gt; ಬೆಂಗಳೂರಿನಲ್ಲಿ ಭಾರಿ ಮಳೆಗೆ ಸಾವು-ನೋವು ಸಂಭವಿಸಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಿಲ್ಲ ಇವರು ಯಾವ ತಯಾರಿಯನ್ನೂ ಮಾಡಿಲ್ಲ. ಭಾರಿ ಮಳೆ ಆಗಬಹುದು ಅಂತ ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ. ಆದರೂ ಯಾವುದೇ ತಯಾರಿ ಮಾಡಿಕೊಂಡಿರಲಿಲ್ಲ. ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;p&gt;&lt;strong&gt;ಬದಲಾವಣೆ ಗಾಳಿ: &lt;/strong&gt;ಇನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದ ಮೂಲಕ ರಾಜ್ಯದ ಮೂಲೆ ಮೂಲೆಗೂ ಸಂದೇಶ ಕೊಡುತ್ತೇವೆ. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಬಹಳ ದೊಡ್ಡ ರಾಜಕೀಯ ಬದಲಾವಣೆ ಆಗಲಿದೆ. ಈ ಕಾರ್ಯಕ್ರಮ ಬಿಜೆಪಿ ಆಕಾಶದೆತ್ತರಕ್ಕೆ ಹಾರುವ ಕಾರ್ಯಕ್ರಮ. ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ದಾಖಲೆ ಪ್ರಮಾಣದಲ್ಲಿ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ.ರಾಘವೇಂದ್ರ&lt;/strong&gt;&lt;/h2&gt;&lt;p&gt;ಈಗಾಗಲೇ ಪಂಚ ರಾಜ್ಯ ಚುನಾವಣೆ ಎಕ್ಸಿಟ್ ಫೋಲ್ ನೋಡಿದ್ದೇವೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಕರ್ನಾಟಕದಲ್ಲಿ ಯಾವಾಗ ಚುನಾವಣೆ ಬರುತ್ತೆ ಅಂತ ಜನ ಕಾಯ್ತಿದ್ದಾರೆ. ಅಮಿತ್ ಶಾ ಅವರ ಮುಂದಿನ ದೃಷ್ಟಿ ಕರ್ನಾಟಕ ರಾಜ್ಯವಾಗಲಿದೆ ಎಂದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/basavaraj-bommai-exit-poll-karnataka-cm-change-statement-gvd/articleshow-c08vabo"/>
        </item>
        <item>
            <title><![CDATA[ಕನಸಲ್ಲೂ ಕೂಡಾ ನಾನು ಸ್ಪೀಕರ್ ಆಗ್ತೇನಿ ಅಂತ ಬಯಸಿರಲಿಲ್ಲ: ರುದ್ರಪ್ಪ ಲಮಾಣಿ ಹೇಳಿದ್ದೇನು?]]></title>
            <link>https://kannada.asianetnews.com/politics/rudrappa-lamani-confident-of-minister-post-ahead-of-cabinet-expansion-gvd/articleshow-cuska6r</link>
            <guid isPermaLink="true">https://kannada.asianetnews.com/politics/rudrappa-lamani-confident-of-minister-post-ahead-of-cabinet-expansion-gvd/articleshow-cuska6r</guid>
            <pubDate>Thu, 04 Jun 2026 17:41:36 +0530</pubDate>
            <description><![CDATA[&lt;p&gt;ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳ ನಡುವೆಯೇ ವಿಧಾನಸಭೆ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಸಚಿವ ಸ್ಥಾನ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kt98q2bahe00w1eay7ptga3q,imgname-chh-1780575078762.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜೂ.04): &lt;/strong&gt;ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳ ನಡುವೆಯೇ ವಿಧಾನಸಭೆ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಸಚಿವ ಸ್ಥಾನ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, &quot;ನಾನು ಕನಸಲ್ಲಿಯೂ ಸ್ಪೀಕರ್ ಆಗುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ. ಪಕ್ಷದ ನಾಯಕತ್ವವೇ ನನಗೆ ಈ ಜವಾಬ್ದಾರಿ ನೀಡಿದೆ. ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ನಾನು ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತೇನೆ&quot; ಎಂದು ಹೇಳಿದರು.&lt;/p&gt;&lt;p&gt;ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಮುಖ್ಯಮಂತ್ರಿ ಹುದ್ದೆಯನ್ನೇ ಬದಲಾಯಿಸಿರುವ ನಾಯಕತ್ವದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಅವರು ಹೇಳಿದರು. &quot;ಕಳೆದ ಬಾರಿ ಹೈಕಮಾಂಡ್ ಸೂಚನೆಯ ಮೇರೆಗೆ ಇಷ್ಟವಿಲ್ಲದಿದ್ದರೂ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಸ್ವೀಕರಿಸಿದ್ದೆ. ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮನವಿಯ ಮೇರೆಗೆ ಆ ಜವಾಬ್ದಾರಿ ವಹಿಸಿಕೊಂಡಿದ್ದೆ&quot; ಎಂದರು.&lt;/p&gt;&lt;p&gt;ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಲಮಾಣಿ, &quot;ರಾಜ್ಯ ಸಚಿವ ಸಂಪುಟದಲ್ಲಿ ಇನ್ನೂ 19 ಸ್ಥಾನಗಳು ಖಾಲಿ ಇವೆ. ಜಾತಿ, ಪ್ರಾದೇಶಿಕ ಮತ್ತು ರಾಜಕೀಯ ಸಮೀಕರಣಗಳನ್ನು ಪರಿಗಣಿಸಿ ಸಚಿವ ಸ್ಥಾನಗಳನ್ನು ಹಂಚಲಾಗುತ್ತದೆ. ಕಳೆದ ಬಾರಿ ಪಕ್ಷದ ನಾಯಕತ್ವದಿಂದ ನನಗೆ ಭರವಸೆ ನೀಡಲಾಗಿತ್ತು. ಈ ಬಾರಿ ನಮ್ಮ ಸಮುದಾಯಕ್ಕೂ ಸಚಿವ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸವಿದೆ&quot; ಎಂದು ಹೇಳಿದರು.&lt;/p&gt;&lt;p&gt;&quot;ಸ್ವಾತಂತ್ರ್ಯ ನಂತರದ ಅವಧಿಯಲ್ಲಿ ನಮ್ಮ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಆದರೆ ಕಳೆದ ಬಾರಿ ಅದು ಸಾಧ್ಯವಾಗಲಿಲ್ಲ. ಈ ಬಾರಿ ಆ ಕೊರತೆ ನೀಗುತ್ತದೆ ಎಂಬ ನಂಬಿಕೆ ಇದೆ. ನಮ್ಮ ಸಮುದಾಯವನ್ನು ಪ್ರತಿನಿಧಿಸುವ ಏಕೈಕ ಶಾಸಕನಾಗಿ ನನ್ನ ಹಕ್ಕಿನ ಬೇಡಿಕೆಯನ್ನು ಪಕ್ಷದ ಮುಂದೆ ಇಡುತ್ತಿದ್ದೇನೆ&quot; ಎಂದು ತಿಳಿಸಿದರು.&lt;/p&gt;&lt;p&gt;ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕುರಿತು ಪ್ರತಿಕ್ರಿಯಿಸಿದ ಅವರು, &quot;ಗೆದ್ದು ಬಂದ ಪ್ರತಿಯೊಬ್ಬ ಶಾಸಕರಿಗೂ ಸಚಿವರಾಗುವ ಆಸೆ ಇರುತ್ತದೆ. ಆದರೆ ಸಂವಿಧಾನಾತ್ಮಕವಾಗಿ ಸಚಿವರ ಸಂಖ್ಯೆಗೆ ಮಿತಿ ಇದೆ. ಹೀಗಾಗಿ ಅಂತಿಮ ನಿರ್ಧಾರವನ್ನು ಪಕ್ಷದ ನಾಯಕತ್ವವೇ ಕೈಗೊಳ್ಳಲಿದೆ&quot; ಎಂದರು.&lt;/p&gt;&lt;p&gt;ಹಿರಿಯ ನಾಯಕ ಹೆಚ್.ಕೆ. ಪಾಟೀಲ್ ಕುರಿತು ಮಾತನಾಡಿದ ಲಮಾಣಿ, &quot;ಹೆಚ್.ಕೆ. ಪಾಟೀಲ್ ಅವರು ನನ್ನ ರಾಜಕೀಯ ಗುರುಗಳು. ಅವರು ದೂರದೃಷ್ಟಿಯ ನಾಯಕರು. ಅವರನ್ನು ಆಡಳಿತ ವ್ಯವಸ್ಥೆಯಲ್ಲಿಯೇ ಬಳಸಿಕೊಳ್ಳುವುದು ರಾಜ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ&quot; ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಸಾರ್ವಜನಿಕವಾಗಿ ಹೇಳಿಕೆ ನೀಡಬಾರದು&lt;/strong&gt;&lt;/h2&gt;&lt;p&gt;ಇದೇ ವೇಳೆ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಶ್ರೀನಿವಾಸ್ ಮಾನೆ ಮತ್ತು ಬಸವರಾಜ ಶಿವಣ್ಣವರ ನಡುವಿನ ಭಿನ್ನಾಭಿಪ್ರಾಯದ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, &quot;ಸತ್ಯಾಂಶ ತಿಳಿಯದೆ ಯಾರೂ ಸಾರ್ವಜನಿಕವಾಗಿ ಹೇಳಿಕೆ ನೀಡಬಾರದು. ಸಣ್ಣ ಭಿನ್ನಾಭಿಪ್ರಾಯಗಳನ್ನು ದೊಡ್ಡದಾಗಿಸದೇ ಪರಸ್ಪರ ತಾಳ್ಮೆಯಿಂದ ವರ್ತಿಸಬೇಕು. ಪಕ್ಷದೊಳಗಿನ ಯಾವುದೇ ಬಿರುಕು ಹೆಚ್ಚಾಗದಂತೆ ಸರಿಪಡಿಸುವ ಪ್ರಯತ್ನ ಮಾಡಲಾಗುತ್ತದೆ&quot; ಎಂದು ತಿಳಿಸಿದರು.&lt;/p&gt;&lt;p&gt;ಮುಖ್ಯಮಂತ್ರಿ ಬದಲಾವಣೆಯ ಸಂದರ್ಭವನ್ನು ಉಲ್ಲೇಖಿಸಿದ ಅವರು, &quot;ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಬಲವನ್ನು ಪ್ರದರ್ಶಿಸುವ ಅವಕಾಶ ಇದ್ದರೂ, ಹೈಕಮಾಂಡ್ ನಿರ್ಧಾರಕ್ಕೆ ಗೌರವ ನೀಡಿ ತಲೆಬಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ತೀರ್ಮಾನವೇ ಅಂತಿಮ&quot; ಎಂದು ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/rudrappa-lamani-confident-of-minister-post-ahead-of-cabinet-expansion-gvd/articleshow-cuska6r"/>
        </item>
        <item>
            <title><![CDATA[ಕೆಪಿಎಸ್ ಶಾಲೆಗಳಿಂದಾಗಿ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚಲಿವೆಯೇ?  ಬಸವರಾಜ ಹೊರಟ್ಟಿ ಆತಂಕ]]></title>
            <link>https://kannada.asianetnews.com/education/will-kps-schools-lead-to-closure-govt-school-what-basavaraj-horatti-said-on-corruption-and-teacher-shortage-rav/articleshow-e2g2a3v</link>
            <guid isPermaLink="true">https://kannada.asianetnews.com/education/will-kps-schools-lead-to-closure-govt-school-what-basavaraj-horatti-said-on-corruption-and-teacher-shortage-rav/articleshow-e2g2a3v</guid>
            <pubDate>Tue, 26 May 2026 11:34:11 +0530</pubDate>
            <description><![CDATA[&lt;p&gt;ಕೆಪಿಎಸ್ ಶಾಲೆಗಳ ಸ್ಥಾಪನೆಯಿಂದಾಗಿ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಅಪಾಯವಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ, ಶಿಕ್ಷಕರ ಕೊರತೆ, ಮತ್ತು ಅವೈಜ್ಞಾನಿಕ ಮೌಲ್ಯಮಾಪನದ ಬಗ್ಗೆಯೂ ಅವರು ತೀವ್ರ ಅಸಮಾಧಾನ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk5svbf6f4tfqqayhk4c203f,imgname----------------------90--1772942634470.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ರಾಜ್ಯದಲ್ಲಿ ಈಗ ಕೆಪಿಎಸ್ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ. ಹೀಗಾದರೆ ಹಳ್ಳಿಗಳಲ್ಲಿರುವ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿ ಬರುತ್ತದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.&lt;/p&gt;&lt;p&gt;ಈ ಬಗ್ಗ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಜತೆಗೆ ತ್ರಿಭಾಷಾ ಸೂತ್ರವನ್ನೇ ಸರಿಯಾಗಿ ಅನುಷ್ಠಾನ ಮಾಡಬೇಕು. ಹಿಂದಿ ಭಾಷೆ ಕಲಿಯದಿದ್ದರೆ ಬೇರೆ ರಾಜ್ಯಕ್ಕೆ ಹೋದಾಗ ಸಮಸ್ಯೆ ಆಗಲಿದೆ. ಪ್ರತಿ ತರಗತಿಗೆ ಒಬ್ಬರು ಶಿಕ್ಷಕರು ಇರುವಂತೆ ನೋಡಿಕೊಳ್ಳಬೇಕು. ಪ್ರತಿ ಹಳ್ಳಿಗಳಲ್ಲಿ ಕನಿಷ್ಠ 5ನೇ ತರಗತಿವರೆಗಾದರೂ ಸರ್ಕಾರಿ ಕನ್ನಡ ಶಾಲೆಗಳು ಇರುವಂತೆ ಸರ್ಕಾರ ನೋಡಿಕೊಳ್ಳಬೇಕು. ಸರ್ಕಾರಿ ಶಾಲೆ ಮುಚ್ಚಿದರೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನಾಚರಣೆ ಮಾಡುವವರ&zwj;್ಯಾರು ಎಂದಿದ್ದಾರೆ.&lt;/p&gt;&lt;p&gt;ಈ ಹಿಂದೆ ಶಾಸಕರ ಮಾದರಿ ಶಾಲೆ ಮಾಡಿದ್ದರು. ಈಗ ಅವುಗಳ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವಲೋಕನ ಮಾಡಬೇಕು. ಕೇರಳದಲ್ಲಿ ಒಂದು ತರಗತಿಗೆ ಒಬ್ಬರು ಶಿಕ್ಷಕರಿದ್ದಾರೆ. ಆದರೆ, ಇಲ್ಲಿ ಶಿಕ್ಷಕರೇ ಇಲ್ಲ. ಹೀಗಾಗಿ, ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಿಕ್ಷಣ ಸಚಿವರಿಗೆ ಇಲಾಖೆಯಲ್ಲಿ ಒಳ್ಳೆಯ ಕೆಲಸ ಮಾಡಬೇಕೆಂಬ ಹುಮ್ಮಸ್ಸಿದೆ. ಆದರೆ, ಅಧಿಕಾರಿಗಳು ಅವರ ದಾರಿ ತಪ್ಪಿಸುತ್ತಿದ್ದಾರೆ ಎಂದರು.&lt;/p&gt;&lt;h2&gt;ಅತಿ ಹೆಚ್ಚು ಭ್ರಷ್ಟಾಚಾರ:&lt;/h2&gt;&lt;p&gt;ಶಿಕ್ಷಣ ಇಲಾಖೆಯಲ್ಲಿ ಇರುವಷ್ಟು ಭ್ರಷ್ಟಾಚಾರ ಯಾವ ಇಲಾಖೆಯಲ್ಲೂ ಇಲ್ಲ. ಈ ಇಲಾಖೆಯಲ್ಲಿ ಅನೇಕ ಅಯೋಗ್ಯ ಅಧಿಕಾರಿಗಳು ಸೇರಿದ್ದಾರೆ. ಕಣ್ಮುಂದೆ ಅನಧಿಕೃತ ಶಾಲೆಗಳು ನಡೆಯುತ್ತಿದ್ದರೂ ಯಾವ ಕ್ರಮ ಕೈಗೊಳ್ಳುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಹದಗೆಡುತ್ತಿದೆ. 12 ಅಂಕ ಪಡೆದ ಮಕ್ಕಳು ಈ ಬಾರಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ ಇಂಟರ್ನಲ್&zwnj; ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಸರಿಯಾಗಿ ಮೌಲ್ಯಮಾಪನ ಮಾಡಿದರೆ ಶೇ.55ರಷ್ಟೂ ಫಲಿತಾಂಶ ಬರುವುದಿಲ್ಲ ಎಂದು ಕಿಡಿಕಾರಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/education/will-kps-schools-lead-to-closure-govt-school-what-basavaraj-horatti-said-on-corruption-and-teacher-shortage-rav/articleshow-e2g2a3v"/>
        </item>
        <item>
            <title><![CDATA[Haveri: ಬರಿದಾಗಿರುವ ವರದಾ ನದಿಯಲ್ಲಿ ಚಿನ್ನದ ಹುಡುಕಾಟ; ಇರ್ಲರ್ ಸಮುದಾಯದಿಂದ ಶೋಧ]]></title>
            <link>https://kannada.asianetnews.com/karnataka-districts/irlar-community-from-shivamogga-have-been-searching-for-gold-particles-in-varada-river-in-haveri-mrq/articleshow-e8ash44</link>
            <guid isPermaLink="true">https://kannada.asianetnews.com/karnataka-districts/irlar-community-from-shivamogga-have-been-searching-for-gold-particles-in-varada-river-in-haveri-mrq/articleshow-e8ash44</guid>
            <pubDate>Sun, 26 Apr 2026 05:28:42 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯಲ್ಲಿ ಬೇಸಿಗೆಯಿಂದ ಬತ್ತುತ್ತಿರುವ ವರದಾ ನದಿಯಲ್ಲಿ, ಶಿವಮೊಗ್ಗ ಮೂಲದ ಇರ್ಲರ್ ಸಮುದಾಯದ ಕುಟುಂಬಗಳು ಚಿನ್ನದ ಕಣಗಳಿಗಾಗಿ ಹುಡುಕಾಟ ನಡೆಸುತ್ತಿವೆ. ಸಾಂಪ್ರದಾಯಿಕ ವಿಧಾನಗಳನ್ನು ಬಳಸಿ ನದಿಯ ಮರಳನ್ನು ಜಾಲಾಡಿ, ದಿನವಿಡೀ ಶ್ರಮವಹಿಸಿ ಬಂಗಾರವನ್ನು ಶೋಧಿಸುವುದು ಇವರ ಕಾಯಕವಾಗಿದೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kq3gxnb5f9ewrvaej3w0v87d,imgname-varada-river-1777161131365.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಬಿರು ಬೇಸಿಗೆಯಿಂದ ಜಿಲ್ಲೆಯಲ್ಲಿ ಜಲ ಮೂಲಗಳು ಬತ್ತುತ್ತಿವೆ. ಆದರೆ, ಹೀಗೆ ಬರಿದಾಗಿರುವುದೇ ಕೆಲವು ಕುಟುಂಬಗಳಿಗೆ ವರವಾಗಿದೆ. ಜಿಲ್ಲೆಯ ವರದಾ ನದಿಯ ಗುಂಡಿಯಲ್ಲಿ ನಿಂತಿರುವ ನೀರಿನಲ್ಲಿ ಶಿವಮೊಗ್ಗ ಮೂಲದ ಕೆಲವು ಕುಟುಂಬಗಳು ಚಿನ್ನಕ್ಕಾಗಿ ಹುಡುಕಾಟ ನಡೆಸಿರುವುದು ಕಂಡು ಬಂದಿದೆ.&lt;/p&gt;&lt;h2&gt;&lt;strong&gt;ದಿನವಿಡೀ ಚಿನ್ನದ ಶೋಧ&lt;/strong&gt;&lt;/h2&gt;&lt;p&gt;ನದಿಯ ಅಲ್ಲಲ್ಲಿ ಸಂಗ್ರಹವಾಗಿರುವ ನೀರಿನ ಮರಳು ಮಿಶ್ರಿತ ಮಣ್ಣಿನಲ್ಲಿ ಬಂಗಾರದ ಕಣಗಳನ್ನು ಶಿವಮೊಗ್ಗ ಮೂಲದ ಇರ್ಲರ್ ಸಮುದಾಯದ ಕುಟುಂಬಗಳು ಹೆಕ್ಕುತ್ತಿವೆ. ಮಹಿಳೆಯರು ಸೇರಿದಂತೆ ಈ ಕುಟುಂಬಗಳ ಹತ್ತಾರು ಜನರು ನದಿಗೆ ಬಂದು ಚಿನ್ನಕ್ಕಾಗಿ ಬೇಟೆ ಆರಂಭಿಸಿದ್ದಾರೆ. ನದಿ ತುಂಬಿ ಹರಿಯುವ ಕಾಲದಲ್ಲಿ ಕಾಣಿಸದಿರುವ ಮರಳು, ಕಪ್ಪು ಮಣ್ಣು ಈಗ ಸುಲಭವಾಗಿ ಕಾಣುತ್ತದೆ. ನೀರು ಬತ್ತುತ್ತಿರುವುದರಿಂದ ಕಬ್ಬಿಣದ ಬುಟ್ಟಿಯಲ್ಲಿ ಮರಳು ಎತ್ತಿ ಈ ಕುಟುಂಬಗಳು ದಿನವಿಡೀ ಚಿನ್ನದ ಶೋಧಕ್ಕೆ ಮುಂದಾಗಿವೆ.&lt;/p&gt;&lt;p&gt;ಬಂಗಾರದ ಬೆಲೆ ಗಗನಮುಖಿಯಾಗಿರುವ ಈ ಸಂದರ್ಭದಲ್ಲಿ ನದಿಯ ತೀರದಲ್ಲಿ ಗೋಲ್ಡ್ ಪ್ಯಾನಿಂಗ್ ಜೋರಾಗಿದೆ. ನೀರು ಕಡಿಮೆಯಾಗುತ್ತಿದ್ದಂತೆ ನದಿಯ ತೀರದಲ್ಲಿ, ನದಿಯ ಮಧ್ಯಭಾಗದ ಒಣ ಹಾಸಿನಲ್ಲಿ, ಮರಳಿನ ಕೆಳಗಿನ ಕಪ್ಪು ಮಣ್ಣಿನಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇವರ ಕೈಯಲ್ಲಿ ಜಾಲಿ, ಪಾತ್ರೆ, ಸಣ್ಣ ಉಪಕರಣಗಳ ಮೂಲಕ ನದಿಯ ಮರಳನ್ನು ತೊಳೆಯುತ್ತಾ, ಮಣ್ಣು ಬೇರ್ಪಡಿಸಿ ಕೊನೆಯಲ್ಲಿ ಉಳಿಯುವ ಆ ಭಾರವಾದ ಬಂಗಾರದ ಕಣಗಳನ್ನು ಹುಡುಕುತ್ತಿದ್ದಾರೆ.&lt;/p&gt;&lt;h3&gt;&lt;strong&gt;ವಿಶೇಷ ವಿಧಾನಗಳಿಂದ ಚಿನ್ನಕ್ಕಾಗಿ ಹುಡುಕಾಟ&lt;/strong&gt;&lt;/h3&gt;&lt;p&gt;ಈ ಕೆಲಸಕ್ಕೆ ವಿಶೇಷ ವಿಧಾನವಿದ್ದು, ಮೊದಲು ನದಿಯ ತಳದಿಂದ ಮರಳು ಮತ್ತು ಕಪ್ಪು ಮಣ್ಣನ್ನು ತೆಗೆದು ಒಂದು ಪಾತ್ರೆಯಲ್ಲಿ ಹಾಕುತ್ತಾರೆ. ನಂತರ ನೀರು ಸುರಿದು, ಪಾತ್ರೆಯನ್ನ ನಿಧಾನವಾಗಿ ಅಲೆಯುತ್ತಾ, ಹಗುರವಾದ ಮರಳು, ಮಣ್ಣು ಹೊರಗೆ ಹೋಗುವಂತೆ ಮಾಡಿ ತಳದಲ್ಲಿ ಭಾರವಾದ ಕಣಗಳು ಮಾತ್ರ ಉಳಿಯುತ್ತವೆ. ಆ ತಳದಲ್ಲಿ ಉಳಿಯುವ ಕಪ್ಪು ಮಣ್ಣಿನ ನಡುವೆ ಕೆಲವೊಮ್ಮೆ ಸಣ್ಣ ಬಂಗಾರದ ಕಣಗಳು ಮಿನುಗುತ್ತವೆ. ಅವನ್ನು ಗುರುತಿಸಿ ಶೇಖರಿಸುವುದೇ ಇವರ ಕಾಯಕವಾಗಿದೆ. ದಿನಪೂರ್ತಿ ಸುಡುವ ಬಿಸಿಲಿನಲ್ಲಿ, ನೀರಿನೊಳಗೆ ನಿಂತುಕೊಂಡೇ ಕೆಲಸ ಮಾಡಬೇಕು.&amp;nbsp;&lt;/p&gt;&lt;p&gt;ಇರ್ಲರ್ ಸಮುದಾಯದ ಈ ಕುಟುಂಬಗಳು ಪೀಳಿಗೆಗಳಿಂದ ಇದೇ ರೀತಿಯ ಕೆಲಸ ಮಾಡುತ್ತಾ ಬಂದಿವೆ. ನದಿಯ ಹರಿವು, ಮಣ್ಣು, ಯಾವ ಭಾಗದಲ್ಲಿ ಬಂಗಾರದ ಕಣ ಸಿಗಬಹುದು ಅನ್ನುವುದರ ಬಗ್ಗೆ ಅವರಿಗೆ ಅರಿವಿದೆ. ಆದರೂ ಇವರಿಗೆ ಪ್ರತಿದಿನದ ಹುಡುಕಾಟ ಒಂದು ಜೂಜಿನಂತಾಗಿಯೇ ಇರುತ್ತದೆ. ಕೆಲವೊಮ್ಮೆ ಸಣ್ಣ ಕಣ ಸಿಕ್ಕರೆ, ಕೆಲವು ಸಲ ಏನೂ ಸಿಗದೇ ಬರಿಗೈಲಿ ವಾಪಸಾಗುತ್ತಾರೆ. ಆದರೂ ಇವರು ತಮ್ಮ ಬಂಗಾರ ಹುಡುಕುವ ಕಾಯಕ ಬಿಡುವುದಿಲ್ಲ. ಬರಿದಾಗುತ್ತಿರುವ ನದಿಯಲ್ಲಿ ಬಂಗಾರಕ್ಕಾಗಿ ಹುಡುಕಾಟ ನಡೆಸಿರುವ ಇವರನ್ನು ನೋಡಿ ಸ್ಥಳೀಯರು ಆಶ್ಚರ್ಯದಿಂದ ನೋಡುತ್ತಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಗಗನಕ್ಕೇರಿದ ಬೆಲೆ: KGFನಲ್ಲಿರೋ ಚಿನ್ನ ಮಿಶ್ರಿತ ಮಣ್ಣನ್ನು ಮೂಟೆಗಳಲ್ಲಿ ತುಂಬಿಕೊಂಡು ಹೋದ ಮಹಿಳೆಯರು&lt;/strong&gt;&lt;/p&gt;&lt;h3&gt;&lt;strong&gt;ಮಳೆಗಾಲದವರೆಗೆ ನಡೆಯಲಿದೆ ಚಿನ್ನಕ್ಕಾಗಿ ಹುಡುಕಾಟ&lt;/strong&gt;&lt;/h3&gt;&lt;p&gt;ಬೇಸಿಗೆ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುತ್ತದೆ. ಈ ವೇಳೆ ನದಿಗೆ ಇಳಿದು ದಿನವಿಡಿ ಶ್ರಮಪಟ್ಟು ಬಂಗಾರದ ಕಣಗಳ ಹುಡುಕಾಟ ನಡೆಸಲಾಗುತ್ತಿದೆ. ಕೆಲವೊಮ್ಮೆ ಬಂಗಾರದ ಕಣಗಳು ಸಿಕ್ಕರೇ, ಕೆಲವೊಮ್ಮೆ ದಿನವಿಡಿ ಶ್ರಮಕ್ಕೆ ಫಲ ಸಿಗದೇ ನಿರಾಸೆ ಅನುಭವಿಸುತ್ತೇವೆ. ಮಳೆಗಾಲದ ತನಕ ಅಲ್ಲಲ್ಲಿ ಬಂಗಾರದ ಕಣಕ್ಕಾಗಿ ನಮ್ಮ ಕುಟುಂಬ ಶೋಧಕಾರ್ಯ ನಡೆಸುತ್ತದೆ ಎಂದು ಬಂಗಾರ ಕಣಕ್ಕಾಗಿ ಶೋಧ ನಡೆಸುತ್ತಿರುವ ನಾಗಣ್ಣ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹಟ್ಟಿ ಗೋಲ್ಡ್ ಮೈನ್ಸ್&zwnj; ಎದುರು ಸ್ಫೋಟಕಗಳ ರಾಶಿ!: ಸಿಸಿಟಿವಿಯಲ್ಲಿ ಕಂಡ ನಂಬರ್ ಪ್ಲೇಟ್ ಇಲ್ಲದ ಆ ನಿಗೂಢ ಬೈಕ್ ಯಾರದ್ದು?&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/irlar-community-from-shivamogga-have-been-searching-for-gold-particles-in-varada-river-in-haveri-mrq/articleshow-e8ash44"/>
        </item>
        <item>
            <title><![CDATA[ರಾಜ್ಯದಲ್ಲಿ ಹೊಸ ರೀತಿಯ ಭ್ರಷ್ಟಾಚಾರ ಹೆಚ್ಚಾಗಿದೆ: ಸಂಸದ ಬೊಮ್ಮಾಯಿ ಹೇಳಿದ್ದೇನು?]]></title>
            <link>https://kannada.asianetnews.com/karnataka-districts/mp-basavaraj-bommai-slams-congress-karnataka-politics-gvd/articleshow-fyrnytz</link>
            <guid isPermaLink="true">https://kannada.asianetnews.com/karnataka-districts/mp-basavaraj-bommai-slams-congress-karnataka-politics-gvd/articleshow-fyrnytz</guid>
            <pubDate>Tue, 12 May 2026 22:57:41 +0530</pubDate>
            <description><![CDATA[&lt;p&gt;ಕಾಂಗ್ರೆಸ್ ಪಕ್ಷ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಅಸ್ತಿತ್ವಕ್ಕಾಗಿ ಇನ್ನೊಂದು ಪಕ್ಷ ಅವಲಂಬಿತವಾಗಿಯೇ ತಮ್ಮ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h09h6p8d77a57yjcyxg0k1ff,imgname-Who-is-Basavaraj-Bommai-1683947215117.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸವಣೂರು (ಮೇ.12): &lt;/strong&gt;ಕಾಂಗ್ರೆಸ್ ಪಕ್ಷ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಅಸ್ತಿತ್ವಕ್ಕಾಗಿ ಇನ್ನೊಂದು ಪಕ್ಷ ಅವಲಂಬಿತವಾಗಿಯೇ ತಮ್ಮ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಜಮ್ಮು ಕಾಶ್ಮೀರದ ವಿಚಾರದಲ್ಲಿ ಒಂದು ದೇಶದಲ್ಲಿ ಇಬ್ಬರು ಪ್ರಧಾನಿ, ಎರಡು ಕಾನೂನು ಇರಲು ಸಾಧ್ಯವಿಲ್ಲ ಎಂದು ಹೇಳಿದರು. ಚುನಾವಣೆಗಾಗಿ ಒಂದು ಪಕ್ಷ ಕಟ್ಟಬಾರದು.&lt;/p&gt;&lt;p&gt;ಒಂದು ದೇಶ ಕಟ್ಟುವ ರಾಷ್ಟ್ರೀಯವಾದಿ ಪಕ್ಷವಾಗಿರಬೇಕು ಎಂದು ಜನಸಂಘವನ್ನು ಕಟ್ಟಿದರು. ಇವತ್ತಿನ ರಾಜಕಾರಣ ನೋಡಿದಾಗ ಅಧಿಕಾರಕ್ಕಾಗಿ ರಾಜಕಾರಣ ಮಾಡುವುದು ಇನ್ನೊಂದು ಜನರಿಗಾಗಿ ಪೀಪಲ್ ಪೊಲಿಟಿಕ್ಸ್ ಮಾಡುವುದು. ಭಾರತೀಯ ಜನತಾಪಕ್ಷ ಪೀಪಲ್ಸ್ ಪೊಲಿಟಿಕ್ಸ್ ಮಾಡುತ್ತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಇನ್ನೊಂದು ಪಕ್ಷ ಅವಲಂಬಿತವಾಗಿಯೇ ತಮ್ಮ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.&lt;/p&gt;&lt;p&gt;ಯಾವ ಪಕ್ಷ ತನ್ನ ಅಸ್ತಿತ್ವಕ್ಕಾಗಿ ಪರದಾಡುತ್ತಿದೆಯೋ ಅಂತಹ ಪಕ್ಷದಿಂದ ದೇಶದ ರಕ್ಷಣೆ ಹೇಗೆ ಸಾಧ್ಯ. ಲಾಭವಾಗಲಿ ನಷ್ಟವಾಗಲಿ ರಾಷ್ಟ್ರವಾದಿ ಚಿಂತನೆ ಮಾಡುವುದು ಬಿಜೆಪಿ, ತಮಿಳುನಾಡಿನಲ್ಲಿ ಆಗಿರುವ ಬೆಳವಣಿಗೆ ಗಮನಿಸಿದ್ದೀರಿ. ಅಲ್ಲಿ ಡಿಎಂಕೆ ಆಡಳಿತ ಇತ್ತು. ಅಲ್ಲಿ ಹೊಸ ಪಕ್ಷ, ಹೊಸ ನಾಯಕನನ್ನು ಆಯ್ಕೆ ಮಾಡಿದ್ದಾರೆ. ಯಾವುದೇ ಸರ್ಕಾರ ಇರಲಿ, ಪುನರ್ ಸ್ಥಾಪನೆ ಆಗುವುದು ಭಾರತೀಯ ಜನತಾ ಪಕ್ಷ ಒಂದು ವಿಚಾರಧಾರೆ ಹಾಗೂ ಒಂದು ಉದ್ದೇಶ, ಭಾರತ ದೇಶ ಮತ್ತು ಭಾರತದ ಭವಿಷ್ಯಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಕರ್ನಾಟಕದಲ್ಲಿ ನಾವು ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಭಾಯಿಸಬೇಕು. ಜನರು ಯಾವುದೇ ಕೆಲಸಕ್ಕೂ ದುಡ್ಡು ಕೊಡದೇ ಈ ಸರ್ಕಾರದಲ್ಲಿ ಏನೂ ಆಗುವುದಿಲ್ಲ, ಸಚಿವರಿಗೆ ದುಡ್ಡು ಕೊಟ್ಟರೆ ಕೆಲಸ, ಇಲ್ಲಿ ಒಂದು ಸಣ್ಣ ಕೆಲಸ ಆಗಬೇಕೆಂದರೂ ಬೆಂಗಳೂರಿನಿಂದ ಫೋನ್ ಬರಬೇಕು, ಅಲ್ಲಿ ಹಣ ಮುಟ್ಟಿದಾಗ ಮಾತ್ರ ಅಲ್ಲಿಂದ ಫೋನ್ ಬರುತ್ತದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಹೊಸ ರೀತಿ ಭ್ರಷ್ಟಾಚಾರ&lt;/strong&gt;&lt;/h2&gt;&lt;p&gt;ಹಿಂದೆಂದೂ ಕಾಣದ ರೀತಿಯಲ್ಲಿ ಹೊಸ ರೀತಿಯ ಭ್ರಷ್ಟಾಚಾರ ರಾಜ್ಯದಲ್ಲಿ ಹೆಚ್ಚಾಗಿದೆ. ಅಭಿವೃದ್ಧಿ ಸಂಪೂರ್ಣ ನಿಂತು ಹೋಗಿದೆ. ಎಸ್ಟಿ, ಎಸ್ಪಿ ಸಮುದಾಯದ ಗಂಗಾ ಕಲ್ಯಾಣ ಯೋಜನೆ ಅಡಿ ಯಾವುದೇ ಬೋ&zwnj;ರ್ ವೆಲ್ ಕೊರೆಯಲಿಲ್ಲ. ಹಿಂದುಳಿದ ವರ್ಗಗಳ ನಿಗಮಗಳಿಗೆ ಮೀಸಲಿಟ್ಟಿದ್ದ 440 ಕೋಟಿ ರು. ಗಳನ್ನು ಹಿಂದುಳಿದ ವರ್ಗಗಳ ಸಮೀಕ್ಷೆ ಮಾಡಲು ಖರ್ಚು ಮಾಡಿದ್ದಾರೆ. ಎಸ್ಸಿಪಿ ಟಿಎಸ್&zwnj;ಪಿಗೆ ಮೀಸಲಿಟ್ಟಿದ್ದರಲ್ಲಿ 1400 ಕೋಟಿ ರು. ಕಡತ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಇಲ್ಲ. ನಾವು ಜನಪರವಾಗಿ ಹೋರಾಟ ಮಾಡಿ ರಾಜಕೀಯ ಜವಾಬ್ದಾರಿ ನಿರ್ವಹಿಸಬೇಕು. ರಾಷ್ಟ್ರೀಯ ಪಕ್ಷವಾಗಿ ಅಂತ್ಯೋದಯ ಅಭಿವೃದ್ದಿ, ದೇಶದ ಐಕ್ಯತೆಯ ವಿಚಾರದಲ್ಲಿ ಎಲ್ಲರೂ ಜನರ ಧ್ವನಿಯಾಗುವ ಸೈನಿಕರಾಗಿ ಹೊರಹೊಮ್ಮಬೇಕು ಎಂದು ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-basavaraj-bommai-slams-congress-karnataka-politics-gvd/articleshow-fyrnytz"/>
        </item>
        <item>
            <title><![CDATA[Haveri: ಅಕ್ರಮ ಸಂಬಂಧ ಶಂಕೆ; ಅಕ್ಕನ ಕತ್ತು ಸೀಳಿದ ತಮ್ಮ! ಅಂಗನವಾಡಿಯಲ್ಲಿ ಭೀಕರ ಕೊಲೆ]]></title>
            <link>https://kannada.asianetnews.com/gallery/karnataka-districts/haveri-suspicion-of-an-illicit-relationship-the-brother-brutally-murdered-his-sister-shiggavi-mrq-gdlh2ed</link>
            <guid isPermaLink="true">https://kannada.asianetnews.com/gallery/karnataka-districts/haveri-suspicion-of-an-illicit-relationship-the-brother-brutally-murdered-his-sister-shiggavi-mrq-gdlh2ed</guid>
            <pubDate>Mon, 25 May 2026 11:40:08 +0530</pubDate>
            <description><![CDATA[ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ, ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಿಂದ ಸ್ವಂತ ತಮ್ಮನೇ ತನ್ನ ಅಕ್ಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯ ಮೇಲೆ ಮಚ್ಚಿನಿಂದ ದಾಳಿ ಮಾಡಿ, ಆಕೆ ಕೆಲಸ ಮಾಡುತ್ತಿದ್ದ ಕೇಂದ್ರದಲ್ಲಿಯೇ ಹತ್ಯೆಗೈದಿದ್ದಾನೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpaqn2dbdgs1ykh3s3bta6ab,imgname-delhi-jafrabad-metro-stabbing-akil-ahmed-murder-match-refusal-case-youth-arrested-crime-news-002-1776329329067.jpg" type="image/jpeg" height="390" width="690"/>
            <content:encoded><![CDATA[ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ, ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಶಂಕೆಯಿಂದ ಸ್ವಂತ ತಮ್ಮನೇ ತನ್ನ ಅಕ್ಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯ ಮೇಲೆ ಮಚ್ಚಿನಿಂದ ದಾಳಿ ಮಾಡಿ, ಆಕೆ ಕೆಲಸ ಮಾಡುತ್ತಿದ್ದ ಕೇಂದ್ರದಲ್ಲಿಯೇ ಹತ್ಯೆಗೈದಿದ್ದಾನೆ.&lt;img&gt;&lt;p&gt;ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಸ್ವಂತ ತಮ್ಮನೇ ಅಕ್ಕನನ್ನು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು 29 ವರ್ಷದ ಸುಮಾ ಶಿವಶಂಕರ್ ವನಹಳ್ಳಿ ಎಂದು ಗುರುತಿಸಲಾಗಿದೆ. ಸಂಜು ಕೊಲೆ ಆರೋಪಿ. (ಸಾಂದರ್ಭಿಕ ಚಿತ್ರ)&lt;/p&gt;&lt;img&gt;&lt;p&gt;ಸುಮಾ ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಎಂದಿನಂತೆ ಸುಮಾ ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ಅಂಗನವಾಡಿ ಕೇಂದ್ರಕ್ಕೆ ಬಂದ ಸಂಜು, ಅಕ್ಕನ ಮೇಳೆ ಮಚ್ಚಿನಿಂದ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. (ಸಾಂದರ್ಭಿಕ ಚಿತ್ರ)&lt;/p&gt;&lt;img&gt;&lt;p&gt;ಮಚ್ಚಿನ ದಾಳಿಗೆ ಒಂದು ಕೈ ತುಂಡಾಗಿದ್ದು, ಕುತ್ತಿಗೆ ಸೀಳಿ ಅಪಾರ ಪ್ರಮಾಣದ ರಕ್ತಸ್ರಾವದಿಂದ ಸುಮಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಂಗನವಾಡಿ ಮುಖ್ಯದ್ವಾರದ ಬಳಿಯೇ ರಕ್ತದ ಮಡುವಿನಲ್ಲಿ ಸುಮಾ ಅವರ ಹೆಣ ಬಿದ್ದಿರೋದನ್ನು ಕಂಡು ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ. (ಸಾಂದರ್ಭಿಕ ಚಿತ್ರ)&lt;/p&gt;&lt;img&gt;&lt;p&gt;ಇಂದು ಬೆಳಗ್ಗೆ ಸುಮಾರು 10.15ರ ವೇಳೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. (ಸಾಂದರ್ಭಿಕ ಚಿತ್ರ)&lt;/p&gt;]]></content:encoded>
            <category>haveri</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/haveri-suspicion-of-an-illicit-relationship-the-brother-brutally-murdered-his-sister-shiggavi-mrq-gdlh2ed"/>
        </item>
        <item>
            <title><![CDATA[ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡದಿರುವುದರಿಂದ ನಿರಾಸೆಯಾಗಿದೆ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/karnataka-districts/mp-basavaraj-bommai-haveri-hospital-demand-karnataka-gvd/articleshow-ih0mpyv</link>
            <guid isPermaLink="true">https://kannada.asianetnews.com/karnataka-districts/mp-basavaraj-bommai-haveri-hospital-demand-karnataka-gvd/articleshow-ih0mpyv</guid>
            <pubDate>Fri, 24 Apr 2026 18:43:44 +0530</pubDate>
            <description><![CDATA[&lt;p&gt;ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಆಗ ಸಕಾರಾತ್ಮವಾಗಿ ಸ್ಪಂದನೆ ಮಾಡಿದ್ದ ಅವರು, ಬಜೆಟ್&zwnj;ನಲ್ಲಿ ಘೋಷಣೆ ಮಾಡದ್ದಕ್ಕೆ ನಿರಾಸೆಯಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-ani20250522093046,imgname-image-27934a14-dc34-425d-9e1f-09bdfb804b82.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಏ.24): &lt;/strong&gt;ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡದಿರುವುದಕ್ಕೆ ಜಿಲ್ಲೆಯ ಜನತೆಗೆ, ಎಲ್ಲ ಪಕ್ಷದ ನಾಯಕರಿಗೆ ನಿರಾಸೆಯಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಏಕೆ ಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಆಗ ಸಕಾರಾತ್ಮವಾಗಿ ಸ್ಪಂದನೆ ಮಾಡಿದ್ದ ಅವರು, ಬಜೆಟ್&zwnj;ನಲ್ಲಿ ಘೋಷಣೆ ಮಾಡದ್ದಕ್ಕೆ ನಿರಾಸೆಯಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.&lt;/p&gt;&lt;p&gt;ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿಗೆ ಮೆಡಿಕಲ್ ಕಾಲೇಜು, ಯುನಿವರ್ಸಿಟಿ, ಎಂಜಿನಿಯರಿಂಗ್ ಕಾಲೇಜು, ಲಾ ಕಾಲೇಜು ಮಾಡಿದ್ದು ಬಿಜೆಪಿ, ನಮ್ಮ ಜಿಲ್ಲೆ ರಾಷ್ಟ್ರೀಯ ಹೆದ್ದಾರಿಯಲ್ಲಿದೆ. ಏನಾದರೂ ಅನಾಹುತ ಆದರೆ ಬಹಳ ಜನರು ಹುಬ್ಬಳ್ಳಿ ಅಥವಾ ದಾವಣಗೆರೆಗೆ ಹೋಗಬೇಕು. ಆಗ ಬಹಳಷ್ಟು ಜನ ಜೀವ ಕಳೆದುಕೊಳ್ಳುತ್ತಾರೆ. ಹೀಗಾಗಿ ಸೂಪರ್ ಸ್ಪೆಷಾಲಿಟಿ ಆಗಬೇಕೆಂದು ಹೇಳಿದ್ದೇವು.&lt;/p&gt;&lt;p&gt;ಅವರದು ಕೇವಲ ಮಾತಿನ ಸಹಾನುಭೂತಿಯಾಗಿದೆ. ಈಗಲೂ ಅವರು ಮಾಡಿರುವ ಅನ್ಯಾಯ ಸರಿಪಡಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮತಿ ಕೊಟ್ಟು ಪೂರಕ ಬಜೆಟ್&zwnj;ನಲ್ಲಾದರೂ ಹಣ ಒದಗಿಸಿದರೆ ಕೆಲಸ ಆರಂಭವಾಗುತ್ತದೆ. ಈಗಲೂ ಕೂಡ ಸಿಎಂಗೆ ಆಗ್ರಹಿಸುತ್ತೇನೆ. ಈಗಾಗಲೇ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರು ಒತ್ತಡ ಮಾಡಿದ್ದಾರೆ. ಆ ಒತ್ತಡಕ್ಕೆ ಸಿಎಂ ಮನ್ನಣೆ ಕೊಡಬೇಕು ಎಂದು ಆಗ್ರಹಿಸಿದರು.&lt;/p&gt;&lt;h2&gt;&lt;strong&gt;ಬೇಡ್ತಿ-ವರದಾ ಡಿಪಿಆರ್&zwnj;ಗೆ ಏಜೆನ್ಸಿ ಫಿಕ್ಸ್&zwnj; ಮಾಡಲಿ&lt;/strong&gt;&lt;/h2&gt;&lt;p&gt;ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಬಗ್ಗೆ ನಾನು ಹೆಚ್ಚಿನ ಆಸಕ್ತಿ ತೋರಿದ್ದೇನೆ. ನಾನು ಸಿಎಂ ಇದ್ದಾಗಲೇ ಯೋಜನೆಗೆ ಡಿಪಿಆರ್&zwnj; ಮಾಡಿಸಿದ್ದೆ. ಆದರೆ ತಾಂತ್ರಿಕ ಕಾರಣದಿಂದ ಅದು ವಾಪಸ್&zwnj; ಆಗಿತ್ತು. ಈಗ ಮತ್ತೆ ಯೋಜನೆ ಜಾರಿಗೆ ಕ್ರಮ ವಹಿಸಲಾಗಿದೆ. ಆದಷ್ಟು ಬೇಗ ರಾಜ್ಯ ಸರ್ಕಾರವು ಡಿಪಿಆರ್&zwnj;ಗೆ ಏಜೆನ್ಸಿ ನಿಗದಿ ಮಾಡಬೇಕು. ಜಿಲ್ಲೆಯಲ್ಲಿ ನೀರು ಸಂಗ್ರಹಣೆಯಾಗಿ ಸದ್ಬಳಕೆಯಾಗಬೇಕು. ಅದು ಡಿಪಿಆರ್&zwnj;ನಲ್ಲಿ ಸೇರಿಸಲು ಕ್ರಮ ಕೈಗೊಳ್ಳಲಾಗುವುದು. ಪಶ್ಚಿಮ ಘಟ್ಟ ಪ್ರದೇಶದ ಜೀವವೈವಿಧ್ಯ ಮತ್ತು ಪರಿಸರ ನಾಶವಾಗದ ರೀತಿಯಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/mp-basavaraj-bommai-haveri-hospital-demand-karnataka-gvd/articleshow-ih0mpyv"/>
        </item>
        <item>
            <title><![CDATA[ಮಹಿಳಾ ಮೀಸಲಾತಿಗಲ್ಲ, ಕ್ಷೇತ್ರ ವಿಂಗಡಣೆಗೆ ವಿಪಕ್ಷಗಳ ವಿರೋಧ: ಸಿಎಂ ಸಿದ್ದರಾಮಯ್ಯ]]></title>
            <link>https://kannada.asianetnews.com/karnataka-districts/siddaramaiah-on-women-reservation-delimitation-karnataka-gvd/articleshow-k3dx91m</link>
            <guid isPermaLink="true">https://kannada.asianetnews.com/karnataka-districts/siddaramaiah-on-women-reservation-delimitation-karnataka-gvd/articleshow-k3dx91m</guid>
            <pubDate>Mon, 20 Apr 2026 17:11:12 +0530</pubDate>
            <description><![CDATA[&lt;p&gt;ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಅದಕ್ಕೆ ಸೇರಿಸಿ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k6w77bhygw249yh0mgbrgqzj,imgname-siddaramaiah-koppal-1759736213051.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಣಿಬೆನ್ನೂರು (ಏ.20): &lt;/strong&gt;ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಅದಕ್ಕೆ ಸೇರಿಸಿ ಮಂಡಿಸಿದ್ದಾರೆ. ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ದೊಡ್ಡ ಕೆರೆ ಪ್ರದೇಶದಲ್ಲಿ ಭಾನುವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.&lt;/p&gt;&lt;p&gt;ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73, 74ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ. ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ.&lt;/p&gt;&lt;h2&gt;&lt;strong&gt;ಮೀಸಲಾತಿಗೆ ನಮ್ಮ ವಿರೋಧವಿಲ್ಲ&lt;/strong&gt;&lt;/h2&gt;&lt;p&gt;ದಕ್ಷಿಣದಲ್ಲಿ ಶೇ. 50 ಮಾಡಿದರೆ ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ. ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. ಶೇ. 50ರಷ್ಟು ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು. ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಒಕ್ಕೂಟದಿಂದ ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆಯೇ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ.&lt;/p&gt;&lt;p&gt;450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ ಯಾರೂ ವಿರೋಧಿಸುತ್ತಿರಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ಮಹಿಳಾ ಮೀಸಲಾತಿ ಮಸೂದೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದರು. ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ವಹಿಸಿದ್ದರು.&lt;/p&gt;&lt;p&gt;ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಸ್ಥಳೀಯ ವಿಧಾನಸಭಾ ಕ್ಷೇತ್ರವ್ಯಾಪ್ತಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಡಿಜಿಟಲ್ ಲೈಬ್ರರಿ ಒಳಗೊಂಡ ಟ್ಯಾಬ್&zwnj;ಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು. ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಶಾಸಕರಾದ ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಹಾವೇಮುಲ ಅಧ್ಯಕ್ಷ ಮಂಜನಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ. ವಿಜಯಪ್ರಕಾಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ, ಜಿಪಂ ಸಿಇಒ ರುಚಿ ಬಿಂದಲ್ ಮತ್ತಿತರರಿದ್ದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/siddaramaiah-on-women-reservation-delimitation-karnataka-gvd/articleshow-k3dx91m"/>
        </item>
        <item>
            <title><![CDATA[ಕುರ್ಚಿ ಕಿತ್ತಾಟದ ಬಗ್ಗೆ ಪ್ರಧಾನಿ ಮೋದಿ ಹೇಳುವುದು ಸ್ವಾಭಾವಿಕ: ಸಚಿವ ಸತೀಶ್ ಜಾರಕಿಹೊಳಿ]]></title>
            <link>https://kannada.asianetnews.com/karnataka-districts/satish-jarkiholi-reacts-to-pm-modi-karnataka-chair-fight-gvd/articleshow-n8q2qfd</link>
            <guid isPermaLink="true">https://kannada.asianetnews.com/karnataka-districts/satish-jarkiholi-reacts-to-pm-modi-karnataka-chair-fight-gvd/articleshow-n8q2qfd</guid>
            <pubDate>Mon, 11 May 2026 21:22:22 +0530</pubDate>
            <description><![CDATA[&lt;p&gt;ಕರ್ನಾಟಕ ರಾಜ್ಯದ ಕುರ್ಚಿ ಕಿತ್ತಾಟದ ಬಗ್ಗೆ ಮೋದಿ ಅವರು ರಾಜಕೀಯವಾಗಿ ಹೇಳುವುದು ಸ್ವಾಭಾವಿಕ. ರಾಜ್ಯದಲ್ಲಿ ಕುರ್ಚಿ ಗುದ್ದಾಟ ಇರುವುದೇ ಅಲ್ವಾ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7ks415c0bec5bxdck4jh9j9,imgname----------------------19--1760526730412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮೇ.11): &lt;/strong&gt;ಕರ್ನಾಟಕ ರಾಜ್ಯದ ಕುರ್ಚಿ ಕಿತ್ತಾಟದ ಬಗ್ಗೆ ಮೋದಿ ಅವರು ರಾಜಕೀಯವಾಗಿ ಹೇಳುವುದು ಸ್ವಾಭಾವಿಕ. ರಾಜ್ಯದಲ್ಲಿ ಕುರ್ಚಿ ಗುದ್ದಾಟ ಇರುವುದೇ ಅಲ್ವಾ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ವರ್ಕಿಂಗ್ ಸ್ಟೈಲ್ ಬೇರೆ, ಕಾಂಗ್ರೆಸ್ ವರ್ಕಿಂಗ್ ಸ್ಟೈಲ್ ಬೇರೆ. ಅವರು ಹೇಳಿದಂತೆ ನಾವು ಹೇಳಲು ಆಗಲ್ಲ. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಯಾವ ರೀತಿ ಅಧಿಕಾರಕ್ಕೆ ಬಂದರು ಅಂತ ಗೊತ್ತಿದೆ ಎಂದರು.&lt;/p&gt;&lt;p&gt;ಪ್ರಧಾನಿ ನರೇಂದ್ರ ಮೋದಿ ಅವರು ಬಂದಾಗ ಭದ್ರತಾ ವೈಫಲ್ಯದ ಬಗ್ಗೆ ಮಾತನಾಡಿದ ಅವರು, ಆ ರೀತಿಯಲ್ಲ ಆಗಲ್ಲ. ಪೊಲೀಸರು ಭದ್ರತೆಯಲ್ಲಿ ಇರುತ್ತಾರೆ. ಅವರೇ ಎಲ್ಲ ನೋಡಿಕೊಳ್ಳುತ್ತಾರೆ. ಎಲ್ಲೋ ಆಗಿದ್ದಕ್ಕೂ, ಪ್ರಧಾನ ಮಂತ್ರಿಗೆ ಹೋಲಿಸಲು ಆಗುವುದಿಲ್ಲ. ಪ್ರಧಾನ ಮಂತ್ರಿ, ಪ್ರಧಾನ ಮಂತ್ರಿನೇ, ಭದ್ರತೆ ಜವಾಬ್ದಾರಿ ನಮ್ಮದು ಅಷ್ಟೇಯಲ್ಲ. ಕೇಂದ್ರ ಸರ್ಕಾರದ್ದು ಇರುತ್ತದೆ. ಅದೇನೂ ಆತಂಕ ಪಡುವಂತಹ ಅವಶ್ಯಕತೆ ಇಲ್ಲ ಎಂದರು.&lt;/p&gt;&lt;h2&gt;&lt;strong&gt;ಟೀಕೆ ಮಾಡುತ್ತಾರೆ&lt;/strong&gt;&lt;/h2&gt;&lt;p&gt;ತಮಿಳುನಾಡಿನಲ್ಲಿ ಸೆಲ್ಯುಲರ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬಹಳ ಸಂತೋಷ. ಆ ಹಿನ್ನೆಲೆಯಲ್ಲಿ ನಾವೆಲ್ಲರೂ ಬೆಂಬಲ ಮಾಡಿದ್ದೇವೆ. ಗ್ಯಾರಂಟಿ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಾರೆ. ಬಿಜೆಪಿ ಅಧಿಕಾರ ಇರುವ ಬೇರೆ ರಾಜ್ಯದಲ್ಲಿ ನಮ್ಮದೇ ಗ್ಯಾರಂಟಿ ಕಾಪಿ ಮಾಡಿ, ಅದನ್ನೇ ಜಾರಿಗೊಳಿಸುತ್ತಾರೆ ಎಂದು ಜಾರಕಿಹೊಳಿ ಲೇವಡಿ ಮಾಡಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/satish-jarkiholi-reacts-to-pm-modi-karnataka-chair-fight-gvd/articleshow-n8q2qfd"/>
        </item>
        <item>
            <title><![CDATA[ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/karnataka-districts/basavaraj-bommai-farmers-bjp-government-karnataka-savanur-statement-gvd/articleshow-q1suhsr</link>
            <guid isPermaLink="true">https://kannada.asianetnews.com/karnataka-districts/basavaraj-bommai-farmers-bjp-government-karnataka-savanur-statement-gvd/articleshow-q1suhsr</guid>
            <pubDate>Wed, 29 Apr 2026 17:28:06 +0530</pubDate>
            <description><![CDATA[&lt;p&gt;ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kceb15sdphe83ngxymkwddjn,imgname-----------------------2025-12-14t171635.624-1765712893741.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸವಣೂರು (ಏ.29): &lt;/strong&gt;ಇನ್ನೆರಡು ವರ್ಷದಲ್ಲಿ ರಾಜ್ಯದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತ ಪರ ಸರ್ಕಾರ ಬಂದಾಗ ರೈತರ ಮಕ್ಕಳಿಗೆ ವಿದ್ಯಾನಿಧಿ, ರೈತರಿಗೆ ಡೀಸೆಲ್&zwnj; ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;&lt;p&gt;ಈ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಎಲ್ಲಿ ಭಕ್ತಿ ಇದೆ. ಅಲ್ಲಿ ತಾಯಂದಿರು ಇರುತ್ತಾರೆ. ಭಕ್ತಿ ಸಂಸ್ಕೃತಿ ನಮ್ಮ ಭಾರತದ ತಾಯಿ, ದ್ಯಾಮವ್ವನ ದೇವಸ್ಥಾನ ಸುಂದರವಾಗಿ ನಿರ್ಮಾಣ ಆಗಿದೆ. ಈ ಊರಿನ ಜನರು ಬಹಳ ದೈವ ಭಕ್ತರಿರುವುದರಿಂದ ಎಲ್ಲ ದೇವಸ್ಥಾನಗಳು ನಿರ್ಮಾಣ ಆಗಿವೆ. ಮಾರುತಿ ದೇವಸ್ಥಾನ, ಪರಮೇಶ್ವರ ದೇವಸ್ಥಾನ, ದ್ಯಾಮವ್ವ, ಮಾಯಮ್ಮನ ದೇವಸ್ಥಾನಗಳ ನಿರ್ಮಾಣ ಆಗಿವೆ ಎಂದು ಹೇಳಿದರು. ಇವತ್ತಿನ ದಿನಮಾನಗಳಲ್ಲಿ ಧರ್ಮ ಜಾಗೃತಿ ಬಹಳ ಮುಖ್ಯವಾಗಿದೆ. ನಮ್ಮ ಬದುಕು ಧರ್ಮದಿಂದ ನಡೆಯಬೇಕು.&lt;/p&gt;&lt;h2&gt;&lt;strong&gt;ನಂಬಿಕೆಯಿಂದ ಶಕ್ತಿ ಬರುತ್ತದೆ&lt;/strong&gt;&lt;/h2&gt;&lt;p&gt;ನ್ಯಾಯ, ನೀತಿ, ಧರ್ಮ ಈ ಮೂರು ಮನಷ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಗುಣಗಳು. ಧರ್ಮದಿಂದ ನಡೆಯಬೇಕೆಂದರೆ ಧರ್ಮದ ಜಾಗೃತಿ ಬಹಳ ಮುಖ್ಯ. ನಮ್ಮ ಜನರಿಗೆ ದೈವದಿಂದ ಧರ್ಮ ಹೀಗಾಗಿ ದೇವಸ್ಥಾನಗಳು ಬಹಳ ಮುಖ್ಯ, ದೇವಸ್ಥಾನಗಳಿಗೆ ಭಕ್ತರ ನಂಬಿಕೆಯಿಂದ ಶಕ್ತಿ ಬರುತ್ತದೆ. ಎಲ್ಲ ದೇವರ ಕೃಪಾಶೀರ್ವಾದ ನಿಮ್ಮ ನಂಬಿಕೆಯಿಂದ ದೈವದ ಅನುಗ್ರಹದಿಂದ ಈ ಊರಿಗೆ ಒಳ್ಳೆಯದಾಗುತ್ತದೆ. ಈ ಊರಿನಲ್ಲಿ ರೈತರು, ಕಾಯಕಯೋಗಿಗಳಿದ್ದಾರೆ. ಪ್ರಗತಿಪರ ಚಿಂತನೆ ಮಾಡುವ ಯುವಕರಿದ್ದಾರೆ. ಮಹಿಳಾ ಸಂಘಗಳಿವೆ. ನಿಮ್ಮ ಆದಾಯ ಕೃಷಿ ಮೇಲೆ ನಿಂತಿದೆ. ನಿಮ್ಮ ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂದು ಹೇಳಿದರು.&lt;/p&gt;&lt;p&gt;ನಾನು ಸಿಎಂ ಇದ್ದಾಗ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಮಾಡಿದೆ. 8ನೇ ತರಗತಿಯಿಂದ ಪಿಜಿವರೆಗೂ ಸ್ಕಾಲರ್ ಶಿಪ್ ನೀಡುತ್ತಿದ್ದೇವು. ಅದರಿಂದ ಸುಮಾರು 11 ಲಕ್ಷ ಮಕ್ಕಳಿಗೆ ಅನುಕೂಲವಾಗಿತ್ತು. ಆ ಯೋಜನೆ ಈಗ ನಿಂತಿದೆ. ಆದರೆ, ಇನ್ನೆರಡು ವರ್ಷದಲ್ಲಿ ರೈತಪರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಈ ವ್ಯವಸ್ಥೆ ಬದಲಾವಣೆಯಾಗಿ ರೈತರ ಸರ್ಕಾರ ಬಂದಾಗ ಮತ್ತೆ ರೈತ ವಿದ್ಯಾನಿಧಿ, ರೈತರಿಗೆ ಡೀಸೆಲ್ ಸಬ್ಸಿಡಿ, ಬೀಜ ಗೊಬ್ಬರಕ್ಕೆ ಸಹಾಯಧನ ನೀಡುವ ಯೋಜನೆಗಳು ಮತ್ತೆ ಜಾರಿಗೆ ಬರುತ್ತವೆ ಎಂದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/basavaraj-bommai-farmers-bjp-government-karnataka-savanur-statement-gvd/articleshow-q1suhsr"/>
        </item>
        <item>
            <title><![CDATA[ಹರಿಹರಪೀಠದ ಬಿಕ್ಕಟ್ಟು: ಸಂಘಟನೆಗೂ ಹಬ್ಬಿದ ಸಂಘರ್ಷದ ಕಿಡಿ, ಪ್ರಧಾನ ಕಾರ್ಯದರ್ಶಿ ಉಚ್ಚಾಟನೆ]]></title>
            <link>https://kannada.asianetnews.com/karnataka-districts/internal-rift-escalates-at-panchamasali-peetha-state-general-secretary-removed-gdp/articleshow-r0yxquk</link>
            <guid isPermaLink="true">https://kannada.asianetnews.com/karnataka-districts/internal-rift-escalates-at-panchamasali-peetha-state-general-secretary-removed-gdp/articleshow-r0yxquk</guid>
            <pubDate>Thu, 30 Apr 2026 12:54:17 +0530</pubDate>
            <description><![CDATA[ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಆರಂಭವಾದ ಒಳಜಗಳವು ಇದೀಗ ರಾಜ್ಯ ಸಂಘಟನೆಯ ಮಟ್ಟಕ್ಕೂ ವ್ಯಾಪಿಸಿದೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನು ಉಚ್ಚಾಟಿಸಿ, ನೂತನ ವ್ಯಕ್ತಿಯನ್ನು ನೇಮಕ ಮಾಡಲಾಗಿದ್ದು, ಈ ಬೆಳವಣಿಗೆಯು ಸಮುದಾಯದೊಳಗಿನ ಸಂಘರ್ಷವನ್ನು ತೀವ್ರಗೊಳಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kqekjh27kfnj98enc63b6mv9,imgname-panchamasali-peetha-controversy-1777533011015.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ದಾವಣಗೆರೆ: &lt;/strong&gt;ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಉಂಟಾದ ಒಳಜಗಳ ಇದೀಗ ಸಂಘಟನೆಯ ಮಟ್ಟಕ್ಕೂ ವಿಸ್ತರಿಸಿ, ಸಂಘರ್ಷದ ಸ್ವರೂಪ ಪಡೆದುಕೊಂಡಿದೆ. ಪೀಠದ ಟ್ರಸ್ಟಿಗಳು ಹಾಗೂ ವಚನಾನಂದ ಶ್ರೀ ಅವರ ಬೆಂಬಲಿಗರ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಭಿನ್ನಾಭಿಪ್ರಾಯಗಳು ಇದೀಗ ಬಹಿರಂಗವಾಗಿ ಹೊರಬಂದಿದ್ದು, ಪರಿಸ್ಥಿತಿ ಉದ್ವಿಗ್ನತೆಯತ್ತ ಸಾಗುತ್ತಿದೆ.&lt;/p&gt;&lt;h2&gt;ರಾಜ್ಯ ಪ್ರಧಾನ ಕಾರ್ಯದರ್ಶಿ ಉಚ್ಚಾಟನೆ&lt;/h2&gt;&lt;p&gt;ಪೀಠದಲ್ಲಿ ಆರಂಭವಾದ ಉಚ್ಚಾಟನೆ ಪರ್ವ ಈಗ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದೊಳಗೂ ಹರಡಿದ್ದು, ಸಂಘದ ಒಳಗೇ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಮೇಶ ಪಟ್ಟಣಶೆಟ್ಟಿ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ ಶಂಕರಗೌಡ ಪಾಟೀಲ್ ಅವರನ್ನು ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ಆದೇಶ ಹೊರಡಿಸಿದ್ದು, ಸಂಘಟನೆಯಲ್ಲಿ ಶಿಸ್ತಿನ ನಿರ್ವಹಣೆ ಮತ್ತು ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.&lt;/p&gt;&lt;h2&gt;ಪರಮೇಶ ಪಟ್ಟಣಶೆಟ್ಟಿ ವಿರುದ್ಧ ಹಲವು ಆರೋಪ&lt;/h2&gt;&lt;p&gt;ಪರಮೇಶ ಪಟ್ಟಣಶೆಟ್ಟಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ರಾಜ್ಯಾಧ್ಯಕ್ಷರ ಹೆಸರನ್ನು ಬಳಸಿಕೊಂಡು ಏಪ್ರಿಲ್ 27ರಂದು ನಡೆದ ಸಭೆಗೆ ಸದಸ್ಯರನ್ನು ಆಹ್ವಾನಿಸಿದ್ದರೆಂಬ ಆರೋಪವಿದ್ದು, ಇದನ್ನು ಸಂಘದ ನಿಯಮ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ. ಅಲ್ಲದೆ, ಸುದ್ದಿಗೋಷ್ಠಿ ನಡೆಸಿ ರಾಜ್ಯಾಧ್ಯಕ್ಷರ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿರುವುದೂ ಅವರ ವಿರುದ್ಧದ ಪ್ರಮುಖ ಆರೋಪಗಳಲ್ಲಿ ಒಂದಾಗಿದೆ.&lt;/p&gt;&lt;p&gt;ಈ ಬೆಳವಣಿಗೆಗಳಿಂದ ಪಂಚಮಸಾಲಿ ಸಂಘದೊಳಗಿನ ಅಂತರ ಕಲಹ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಹಾಗೂ ಸಂಘಟನಾ ಚಟುವಟಿಕೆಗಳು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ, ಪೀಠದಲ್ಲಿ ಆರಂಭವಾದ ಗಲಾಟೆ ಸಂಘದ ಮಟ್ಟಕ್ಕೂ ವ್ಯಾಪಿಸಿರುವುದು ಪಂಚಮಸಾಲಿ ಸಮುದಾಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಹಿರಿಯರು ಮಧ್ಯಪ್ರವೇಶಿಸುವ ಅಗತ್ಯತೆ ಎದುರಾಗಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/internal-rift-escalates-at-panchamasali-peetha-state-general-secretary-removed-gdp/articleshow-r0yxquk"/>
        </item>
        <item>
            <title><![CDATA[ಹಸು/ಎಮ್ಮೆ ಆಕಸ್ಮಿಕವಾಗಿ ಮರಣ ಹೊಂದಿದಾಗ ರೈತರಿಗೆ ಆರ್ಥಿಕ ಭದ್ರತೆ ನೀಡುವ ಯೋಜನೆಗೆ ಚಾಲನೆ]]></title>
            <link>https://kannada.asianetnews.com/karnataka-districts/rasu-insurance-scheme-launched-to-provide-financial-security-to-farmers-in-case-of-accidental-death-cow-or-buffalo-mrq/articleshow-thcix0z</link>
            <guid isPermaLink="true">https://kannada.asianetnews.com/karnataka-districts/rasu-insurance-scheme-launched-to-provide-financial-security-to-farmers-in-case-of-accidental-death-cow-or-buffalo-mrq/articleshow-thcix0z</guid>
            <pubDate>Sat, 18 Apr 2026 22:46:21 +0530</pubDate>
            <description><![CDATA[ಹಾವೇರಿಯಲ್ಲಿ ಹೈನುಗಾರರ ಹಿತದೃಷ್ಟಿಯಿಂದ &lsquo;ರಾಸು ವಿಮೆ&rsquo; ಯೋಜನೆಗೆ ಚಾಲನೆ ನೀಡಲಾಗಿದೆ. ಹಸು ಅಥವಾ ಎಮ್ಮೆ ಆಕಸ್ಮಿಕವಾಗಿ ಮರಣ ಹೊಂದಿದಾಗ ರೈತರಿಗೆ ಆರ್ಥಿಕ ಭದ್ರತೆ ನೀಡಿ, ಹೈನುಗಾರಿಕೆಯನ್ನು ಮುಂದುವರಿಸಲು ಈ ಯೋಜನೆ ಸಹಕಾರಿಯಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpgsd04vm8vqd6f1ctzq1yyw,imgname-haveri-1776532488346.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ:&lt;/strong&gt; ಹಸು ಅಥವಾ ಎಮ್ಮೆ ಆಕಸ್ಮಿಕವಾಗಿ ಮರಣ ಹೊಂದಿದಾಗ ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಂದರ್ಭಗಳಲ್ಲಿ &lsquo;ರಾಸು ವಿಮೆ&rsquo; ಈ ಯೋಜನೆ ಬಲವಾದ ಆರ್ಥಿಕ ಭದ್ರತೆಯಾಗಿ ನೆರವಾಗಲಿದೆ ಎಂದು ಹಾವೇಮುಲ್ ನಿರ್ದೇಶಕ ಪ್ರಕಾಶ ಬನ್ನಿ ಹಟ್ಟಿ ಹೇಳಿದರು.&lt;/p&gt;&lt;p&gt;ತಾಲೂಕಿನ ಮುತ್ತೂರು ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ಹೈನುಗಾರರ ಹಿತದೃಷ್ಟಿಯಿಂದ &lsquo;ರಾಸು ವಿಮೆ&rsquo; ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹೈನುಗಾರಿಕೆ ಗ್ರಾಮೀಣ ರೈತರ ಬದುಕಿನ ಪ್ರಮುಖ ಆಧಾರವಾಗಿದ್ದು, ರಾಸುಗಳ ನಷ್ಟದಿಂದ ಅನೇಕ ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ.&amp;nbsp;&lt;/p&gt;&lt;h2&gt;&lt;strong&gt;ರೈತರಿಗೆ ರಕ್ಷಾ ಕವಚ &amp;nbsp;ಈ ರಾಸು ವಿಮೆ&lt;/strong&gt;&lt;/h2&gt;&lt;p&gt;ಇಂತಹ ಸಂದರ್ಭದಲ್ಲಿ &lsquo;ರಾಸು ವಿಮೆ&rsquo; ಯೋಜನೆ ರೈತರಿಗೆ ರಕ್ಷಾ ಕವಚವಾಗಿ ಕೆಲಸ ಮಾಡಲಿದ್ದು, ನಷ್ಟಕ್ಕೆ ಪರಿಹಾರ ದೊರೆಯುವುದರ ಜೊತೆಗೆ ಮತ್ತೆ ಹೊಸ ರಾಸು ಖರೀದಿಸಿ ಹೈನುಗಾರಿಕೆಯನ್ನು ಮುಂದುವರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.&lt;/p&gt;&lt;p&gt;ಇದೇ ಸಂದರ್ಭದಲ್ಲಿ ಮರಣ ಹೊಂದಿದ ಸದಸ್ಯರ ಕುಟುಂಬಗಳಿಗೆ ಕಲ್ಯಾಣ ನಿಧಿಯ ಚೆಕ್&zwnj;ಗಳನ್ನು ವಿತರಿಸಲಾಯಿತು. ಜೊತೆಗೆ ಹೈನುಗಾರರಿಗೆ ರಾಸು ವಿಮೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಗೇಂದ್ರಪ್ಪ ಜಿಗಳಿಕೊಪ್ಪ, ಆಡಳಿತ ಮಂಡಳಿಯ ಸದಸ್ಯರು, ಒಕ್ಕೂಟದ ಅಧಿಕಾರಿಗಳಾದ ಡಾ. ಶರಣಪ್ಪ, ವಿಸ್ತರಣಾ ಅಧಿಕಾರಿಗಳಾದ ಅಜಯ ಕುಮಾರ್ ರಿತ್ತಿ ಹಾಗೂ ವ್ಯಾಪಾರಸ್ಥ ರಮೇಶ ಮೋಟೆಬೆನ್ನೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಲವಿಸರ್ಜನೆಗೆ ತೆರಳಿದಾಗ ಅತಿ ಆಯಾಸದಿಂದ 10 ವರ್ಷದ ಸ್ಮರಣ ಶಕ್ತಿ ಕಳೆದುಕೊಂಡ ಮ&lt;/strong&gt;&lt;strong&gt;ಹಿಳೆ&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನಾರಿಶಕ್ತಿ ವಂದನಾ ಮಸೂದೆಗೆ ಸೋಲು: ದೇಶದ ಮಹಿಳೆಯರಲ್ಲಿ ಕ್ಷಮೆ ಯಾಚಿಸಿದ ಪ್ರಧಾನಿ ಮೋದಿ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rasu-insurance-scheme-launched-to-provide-financial-security-to-farmers-in-case-of-accidental-death-cow-or-buffalo-mrq/articleshow-thcix0z"/>
        </item>
        <item>
            <title><![CDATA[ಧಾರವಾಡ ಹರ್ಷಾ ಎಂಟರ್ಪ್ರೈಸಸ್ ವಂಚನೆ: ಸಂತ್ರಸ್ತರಿಗೆ ಪರಿಹಾರ ನೀಡಲು ಅರ್ಜಿ ಆಹ್ವಾನಿಸಿದ ಜಿಲ್ಲಾಡಳಿತ!]]></title>
            <link>https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta</link>
            <guid isPermaLink="true">https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta</guid>
            <pubDate>Sun, 10 May 2026 17:41:46 +0530</pubDate>
            <description><![CDATA[&lt;p&gt;ಧಾರವಾಡ ಮನಿ ಡಬ್ಲಿಂಗ್ ಹೆಸರಲ್ಲಿ ಹರ್ಷಾ ಎಂಟರ್ಪ್ರೈಸಸ್ ಬಹುಕೋಟಿ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಸರ್ಕಾರ ಕಾಸ್ನಿಸ್ ಬ್ರದರ್ಸ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಕೆ ವಿವರ, ಕೊನೆ ದಿನಾಂಕ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kr8vkdx93d4rrgapzqv5xyjv,imgname-dharwad-harsha-enterprises-scam-1778413844392.jpg" type="image/jpeg" height="390" width="690"/>
            <content:encoded><![CDATA[&lt;p&gt;ಧಾರವಾಡ ಮನಿ ಡಬ್ಲಿಂಗ್ ಹೆಸರಲ್ಲಿ ಹರ್ಷಾ ಎಂಟರ್ಪ್ರೈಸಸ್ ಬಹುಕೋಟಿ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ಸರ್ಕಾರ ಕಾಸ್ನಿಸ್ ಬ್ರದರ್ಸ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದೀಗ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಕೆ ವಿವರ, ಕೊನೆ ದಿನಾಂಕ ಇಲ್ಲಿದೆ.&lt;/p&gt;&lt;img&gt;&lt;p&gt;ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಹರ್ಷಾ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಾವಿರಾರು ಜನರಿಗೆ ಹಣದ ಆಮಿಷವೊಡ್ಡಿ ಪಂಗನಾಮ ಹಾಕಿದ್ದ ಕಾಸ್ನಿಸ್ ಬ್ರದರ್ಸ್ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದು, ವಂಚನೆಗೊಳಗಾದವರಿಗೆ ಪರಿಹಾರ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ.&lt;/p&gt;&lt;img&gt;&lt;p&gt;2016-17ರ ಅವಧಿಯಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಕಾಸ್ನಿಸ್ ಬ್ರದರ್ಸ್ ಈ ಬೃಹತ್ ವಂಚನೆ ಜಾಲವನ್ನು ನಡೆಸಿದ್ದರು. &lsquo;ಹಣವನ್ನು ದುಪ್ಪಟ್ಟು (Double) ಮಾಡಿಕೊಡುತ್ತೇವೆ&rsquo; ಎಂದು ಜನರಿಗೆ ಆಮಿಷವೊಡ್ಡಿದ್ದ ಹರ್ಷಾ ಎಂಟರ್ಪ್ರೈಸಸ್, ಜಿಲ್ಲೆಯಾದ್ಯಂತ ಸಾವಿರಾರು ಜನರಿಂದ ಹಣ ಸಂಗ್ರಹಿಸಿತ್ತು. ಜನರಿಂದ ಪಡೆದ ಕೋಟ್ಯಂತರ ರೂಪಾಯಿ ಹಣವನ್ನು ಸಿನಿಮಾ ನಿರ್ಮಾಣಕ್ಕೂ ಬಳಸಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ.&lt;/p&gt;&lt;img&gt;&lt;p&gt;ಕಂಪನಿಯು ಹಣ ಹಿಂತಿರುಗಿಸದೆ ವಂಚಿಸಿದಾಗ ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರ ತನಿಖೆಯನ್ನು ಸಿಐಡಿಗೆ (CID) ವಹಿಸಿತ್ತು.&lt;/p&gt;&lt;img&gt;&lt;p&gt;ಸಿಐಡಿ ಅಧಿಕಾರಿಗಳು ನಡೆಸಿದ ಸುದೀರ್ಘ ತನಿಖೆಯಲ್ಲಿ ಹರ್ಷಾ ಎಂಟರ್ಪ್ರೈಸಸ್ ಸುಮಾರು 77 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿರುವ ದಾಖಲೆಗಳು ಲಭ್ಯವಾಗಿವೆ. ನೂರಾರು ಜನಸಾಮಾನ್ಯರು ತಮ್ಮ ಜೀವಮಾನದ ಉಳಿತಾಯವನ್ನು ಈ ಕಂಪನಿಯಲ್ಲಿ ಹೂಡಿಕೆ ಮಾಡಿ ಕಳೆದುಕೊಂಡಿದ್ದರು. ಸದ್ಯ ಸಿಐಡಿ ವರದಿಯನ್ನಾಧರಿಸಿ ಸರ್ಕಾರವು ಕಾಸ್ನಿಸ್ ಬ್ರದರ್ಸ್ ಅವರ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿದೆ.&lt;/p&gt;&lt;img&gt;&lt;p&gt;ಕಾಸ್ನಿಸ್ ಬ್ರದರ್ಸ್&zwnj;ನಿಂದ ವಂಚನೆಗೊಳಗಾದವರಿಗೆ ನ್ಯಾಯ ಒದಗಿಸಲು ಧಾರವಾಡ ಜಿಲ್ಲಾಡಳಿತ ಮುಂದಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಮೂಲಕ ಸಂತ್ರಸ್ತರಿಗೆ ಹಣ ಮರಳಿಸಲು ಅರ್ಜಿ ಆಹ್ವಾನಿಸಲಾಗಿದೆ.&lt;/p&gt;&lt;p&gt;&lt;strong&gt;ದಾಖಲಾತಿ ಸಲ್ಲಿಕೆ: &lt;/strong&gt;ವಂಚಿತರು ತಮ್ಮಲ್ಲಿರುವ ಹೂಡಿಕೆಯ ಮೂಲ ದಾಖಲೆಗಳು, ರಶೀದಿಗಳು ಮತ್ತು ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.&lt;/p&gt;&lt;img&gt;&lt;p&gt;&lt;strong&gt;ಅವಕಾಶ: &lt;/strong&gt;ಅರ್ಜಿ ಸಲ್ಲಿಸಲು ಜಿಲ್ಲಾಡಳಿತವು ಒಂದು ತಿಂಗಳ ಕಾಲಾವಕಾಶ (ಏ.27ರಿಂದ ಮೇ 26ರವರೆಗೆ) ನೀಡಿದೆ.&lt;/p&gt;&lt;p&gt;&lt;strong&gt;ಜನರ ಸಾಲು:&lt;/strong&gt; ಪರಿಹಾರದ ನಿರೀಕ್ಷೆಯಲ್ಲಿ ನೂರಾರು ಜನರು ಈಗಾಗಲೇ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾಡಳಿತದ ಕಚೇರಿ ಮುಂದೆ ಸಾಲುಗಟ್ಟಿ ನಿಂತು ಅರ್ಜಿ ಸಲ್ಲಿಸುತ್ತಿದ್ದಾರೆ.&lt;/p&gt;&lt;img&gt;&lt;p&gt;ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಅರ್ಹ ಸಂತ್ರಸ್ತರಿಗೆ ಹಂತ ಹಂತವಾಗಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಹತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ವಂಚಿತರಿಗೆ ಈಗ ನ್ಯಾಯ ಸಿಗುವ ಭರವಸೆ ಮೂಡಿದೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/dharwad-harsha-enterprises-scam-kasnis-brothers-assets-confiscated-compensation-process-sat-uhgddta"/>
        </item>
        <item>
            <title><![CDATA[Haveri: ಬಿತ್ತನೆ ಬೀಜಕ್ಕೆ ಕೃಷಿ ಕೇಂದ್ರ ಮುಂದೆ ಮಲಗಿದ ರೈತರು; ವಿಳಂಬ ಧೋರಣೆಗೆ ಆಕ್ರೋಶ]]></title>
            <link>https://kannada.asianetnews.com/karnataka-districts/haveri-farmers-sleeping-in-front-of-the-agricultural-center-to-sow-seeds-mrq/articleshow-yvoqgwf</link>
            <guid isPermaLink="true">https://kannada.asianetnews.com/karnataka-districts/haveri-farmers-sleeping-in-front-of-the-agricultural-center-to-sow-seeds-mrq/articleshow-yvoqgwf</guid>
            <pubDate>Sat, 23 May 2026 06:34:07 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಬಿತ್ತನೆ ಬೀಜಗಳಿಗೆ ಬೇಡಿಕೆ ಹೆಚ್ಚಿದೆ. ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯಲ್ಲಿ ಸೋಯಾಬೀನ್, ಶೇಂಗಾ ಬೀಜಗಳಿಗಾಗಿ ರೈತರು ಕೃಷಿ ಕೇಂದ್ರದ ಮುಂದೆ ರಾತ್ರಿಯಿಡೀ ಸರದಿ ಸಾಲಿನಲ್ಲಿ ಕಾಯುತ್ತಿದ್ದು, ಅಧಿಕಾರಿಗಳ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01ks95rc77na6bft4vwhmj94hg,imgname-haveri-farmers--1779498234087.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಜಿಲ್ಲೆಯಲ್ಲಿ ಹದವಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜಗಳಿಗಾಗಿ ರೈತರ ಪರದಾಟ ಶುರುವಾಗಿದ್ದು, ಜಿಲ್ಲೆಯ ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿ ಕೃಷಿ ಕೇಂದ್ರದ ಮುಂದೆ ಅನ್ನದಾತರು ಶುಕ್ರವಾರ ರಾತ್ರಿ ಪೂರ್ತಿ ಸರದಿ ಸಾಲಿನಲ್ಲಿ ಮಲಗಿದರು.&lt;/p&gt;&lt;p&gt;ಸೋಯಾಬೀನ್, ಶೇಂಗಾ ಬೀಜಕ್ಕಾಗಿ ರೈತರ ಪರದಾಡುತ್ತಿದ್ದಾರೆ. ಎರಡು ದಿನಗಳಿಂದ ಕೃಷಿ ಇಲಾಖೆಯಿಂದ ಸರಿಯಾಗಿ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ. ನೆಟ್&zwnj;ವರ್ಕ್ ಸಮಸ್ಯೆ ನೆಪ ಹೇಳಿ ಬಿತ್ತನೆ ಬೀಜ ನೀಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದು, ರಾತ್ರೀ ಇಡೀ ಅನ್ನದಾತರು ಕೃಷಿ ಕೇಂದ್ರ ಮುಂದೆ ಕ್ಯೂ ಹಚ್ಚಿ ಮಲಗಿದ್ದಾರೆ.&lt;/p&gt;&lt;h2&gt;&lt;strong&gt;ಬೀಜ ಪಡೆಯಲು ನೂಕುನುಗ್ಗಲು&lt;/strong&gt;&lt;/h2&gt;&lt;p&gt;ಇನ್ನು ಹಗಲು ರಾತ್ರಿ ಕೆಲವು ಕಡೆ ಬಿತ್ತನೆ ಬೀಜ ಪಡೆಯಲು ನೂಕುನುಗ್ಗಲು ಉಂಟಾಗುತ್ತಿದ್ದು, ಕೃಷಿ ಇಲಾಖೆಯ ವಿರುದ್ಧ ಜಿಲ್ಲೆಯ ಅನ್ನದಾತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಅಗತ್ಯ ಬೀಜ ದಾಸ್ತಾನಿಲ್ಲ ಹಾಗೂ ಸರದಿಯಲ್ಲಿ ನಿಂತರೂ ಬೀಜ ಸಿಗುತ್ತಿಲ್ಲ, ಉತ್ತಮ ಮಳೆ ಆಗುತ್ತಿರುವುದರಿಂದ ಬೀಜ ಖಾಲಿ ಆದರೆ ಸಮಸ್ಯೆಯಾಗುತ್ತದೆ ಎಂದು ರೈತರು ಶುಕ್ರವಾರ ರಾತ್ರಿಯೇ ಕೃಷಿ ಕೇಂದ್ರದ ಬಳಿ ಆಗಮಿಸಿದ್ದರು.&lt;/p&gt;&lt;p&gt;ಇನ್ನು ಶುಕ್ರವಾರ ಸಂಜೆ ಸುರಿಯುವ ಮಳೆಯಲ್ಲೇ ಕೆಲ ರೈತರು ಸರದಿಯಲ್ಲಿ ನಿಂತು ಬೀಜ ಖರೀದಿಸಿದ ದೃಶ್ಯಗಳು ಕಂಡುಬಂತು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-farmers-sleeping-in-front-of-the-agricultural-center-to-sow-seeds-mrq/articleshow-yvoqgwf"/>
        </item>
        <item>
            <title><![CDATA[ಬಣ್ಣ ಬಣ್ಣದ ಬಲೂನ್‌ ಮಾರಿ ಬದುಕುತ್ತಿರುವವನ ಮಗಳಿಗೆ  623 ಅಂಕ! ಗ್ಯಾರೇಜ್‌ನಲ್ಲಿ ಕೆಲಸ ಮಾಡುವವನ ಮಗನಿಗೆ 98%!]]></title>
            <link>https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi</link>
            <guid isPermaLink="true">https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi</guid>
            <pubDate>Thu, 23 Apr 2026 15:40:26 +0530</pubDate>
            <description><![CDATA[ಮಧುಗಿರಿ ಪಟ್ಟಣದ ವಿದ್ಯಾರ್ಥಿನಿ ಹಿತಾಶ್ರೀ ಡಿ., ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಲೂನ್ ಮಾರಾಟ ಮಾಡಿ ಜೀವನ ಸಾಗಿಸುವ ತಂದೆಯ ಮಗಳಾದ ಇವರು, ಆರ್ಥಿಕ ಸಂಕಷ್ಟಗಳ ನಡುವೆಯೂ ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kpwwtn3jetprypp25mqrzg5d,imgname-success-story-from-tumakuru-1776938734706.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025&ndash;26ನೇ ಶೈಕ್ಷಣಿಕ ಸಾಲಿನ ಎಸ್&zwnj;ಎಸ್&zwnj;ಎಲ್&zwnj;ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ, ತುಮಕೂರು ಜಿಲ್ಲೆಯಲ್ಲಿ ಹೆಮ್ಮೆ &amp;nbsp;ಪಡುವಂತಹ ಸಾಧನೆಯೊಂದು ಬೆಳಕಿಗೆ ಬಂದಿದೆ. ಸಾಮಾನ್ಯ ಕುಟುಂಬದಿಂದ ಬಂದಿದ್ದರೂ, ಅಪಾರ ಸಂಕಲ್ಪ ಮತ್ತು ಶ್ರಮದಿಂದ ರಾಜ್ಯ ಮಟ್ಟದಲ್ಲಿ ಹೆಸರು ಮಾಡಿರುವ ವಿದ್ಯಾರ್ಥಿನಿಯ ಕಥೆ ಎಲ್ಲರ ಗಮನ ಸೆಳೆಯುತ್ತಿದೆ.&lt;/p&gt;&lt;p&gt;ಮಧುಗಿರಿ ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಹಿತಾಶ್ರೀ ಡಿ., ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 625ರಲ್ಲಿ 623 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅವಳ ಈ ಸಾಧನೆ ಕೇವಲ ವೈಯಕ್ತಿಕ ಜಯವಲ್ಲ; ಬಡತನದ ನಡುವೆಯೂ ಶಿಕ್ಷಣದ ಮಹತ್ವವನ್ನು ಎತ್ತಿಹಿಡಿಯುವ ಪ್ರೇರಣಾದಾಯಕ ಉದಾಹರಣೆಯಾಗಿದೆ.&lt;/p&gt;&lt;h2&gt;ಆರ್ಥಿಕ ಸಂಕಷ್ಟಗಳ ನಡುವೆ ಗೆದ್ದ ಮಗಳು&lt;/h2&gt;&lt;p&gt;ಹಿತಾಶ್ರೀಯ ತಂದೆ ದಿನನಿತ್ಯ ಬಣ್ಣಬಣ್ಣದ ಬಲೂನ್&zwnj;ಗಳನ್ನು ಮಾರಾಟ ಮಾಡಿ ಕುಟುಂಬವನ್ನು ನಡೆಸುವ ಸಾಮಾನ್ಯ ವ್ಯಾಪಾರಿ. ಆರ್ಥಿಕ ಸಂಕಷ್ಟಗಳ ನಡುವೆಯೂ ಮಗಳ ವಿದ್ಯಾಭ್ಯಾಸಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರಮಿಸಿದ ಅವರ ಪರಿಶ್ರಮ ಇಂದು ಫಲ ತಂದಿದೆ. ಬಲೂನ್ ಮಾರಾಟದಿಂದ ಬಂದ ಸಣ್ಣ ಆದಾಯದಲ್ಲೇ ಮಗಳನ್ನು ಓದಿಸಿ ದೊಡ್ಡ ಸಾಧನೆ ಮಾಡಿಸಬೇಕು ಎಂಬ ಅವರ ಕನಸು ಈಗ ನನಸಾಗಿದೆ.&lt;/p&gt;&lt;p&gt;ಕಷ್ಟದ ಪರಿಸ್ಥಿತಿಗಳ ನಡುವೆಯೂ ಹಿತಾಶ್ರೀ ತನ್ನ ಓದಿನಲ್ಲಿ ನಿರಂತರ ಪರಿಶ್ರಮ ತೋರಿದ್ದು, ಸಮಯವನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಿದ್ದಾಳೆ. ದಿನನಿತ್ಯದ ಸವಾಲುಗಳನ್ನು ಎದುರಿಸುತ್ತಾ, ಗುರಿಯತ್ತ ಗಮನ ಹರಿಸಿದ ಅವಳ ದೃಢಸಂಕಲ್ಪವೇ ಇಂತಹ ಅಸಾಧಾರಣ ಫಲಿತಾಂಶಕ್ಕೆ ಕಾರಣವಾಗಿದೆ. ರಾಜ್ಯದ ಟಾಪ್ 28 ವಿದ್ಯಾರ್ಥಿಗಳ ಪೈಕಿ ಸ್ಥಾನ ಪಡೆದಿರುವುದು ಅವಳ ಪ್ರತಿಭೆಗೆ ಸಾಕ್ಷಿಯಾಗಿದೆ.&lt;/p&gt;&lt;h2&gt;ಅನೇಕರಿಗೆ ಸ್ಫೂರ್ತಿ&lt;/h2&gt;&lt;p&gt;ಈ ಸಾಧನೆಗೆ ಶಾಲೆಯ ಶಿಕ್ಷಕರು, ಕುಟುಂಬದ ಸದಸ್ಯರು ಹಾಗೂ ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ. &ldquo;ಬಣ್ಣದ ಬಲೂನ್ ಮಾರುವ ಮನೆಯಲ್ಲೂ ಜ್ಞಾನದ ಬೆಳಕು ಹಬ್ಬಬಹುದು&rdquo; ಎಂಬುದನ್ನು ಹಿತಾಶ್ರೀ ತನ್ನ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾಳೆ. ಹಿತಾಶ್ರೀಯ ಸಾಧನೆ ಅನೇಕ ಬಡ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವಂತಿದ್ದು, ಪರಿಶ್ರಮ ಮತ್ತು ದೃಢ ನಿಶ್ಚಯ ಇದ್ದರೆ ಯಾವುದೇ ಅಡೆತಡೆಗಳು ಗುರಿಯನ್ನು ತಲುಪುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನೀಡುತ್ತದೆ.&lt;/p&gt;&lt;h2&gt;ಬೈಕ್ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಮಗನ ಸಾಧನೆ&lt;/h2&gt;&lt;p&gt;ಹಾವೇರಿ ಜಿಲ್ಲೆಯಲ್ಲೊಂದು ಪ್ರೇರಣಾದಾಯಕ ಸಾಧನೆಯ ಕಥೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಠಿಣ ಪರಿಸ್ಥಿತಿಗಳ ನಡುವೆಯೂ ಪರಿಶ್ರಮದಿಂದ ಶ್ರೇಷ್ಠ ಫಲಿತಾಂಶ ಸಾಧಿಸಿರುವ ವಿದ್ಯಾರ್ಥಿಯೊಬ್ಬನ ಕಥೆ ಹಲವರಿಗೆ ಸ್ಪೂರ್ತಿಯಾಗಿದೆ.&lt;/p&gt;&lt;p&gt;ಹಾವೇರಿ ತಾಲೂಕು ನೆಗಳೂರು ಗ್ರಾಮದ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ಭರತ್ ಬಸವರಾಜ ಹಿರೇಮಠ ಅವರು ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯಲ್ಲಿ 98 ಶೇಕಡಾ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಕಡಿಮೆ ಸೌಲಭ್ಯಗಳ ನಡುವೆಯೂ ಉನ್ನತ ಗುರಿಯನ್ನು ಸಾಧಿಸಿರುವ ಭರತ್ ಅವರ ಸಾಧನೆಗೆ ಶಿಕ್ಷಕರು, ಗ್ರಾಮಸ್ಥರು ಮತ್ತು ಬಂಧು-ಬಳಗದಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;&lt;p&gt;ಭರತ್ ಅವರ ತಂದೆ ಬೈಕ್ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಮನೆಮಠಗಳಲ್ಲಿ ಅಡುಗೆ ಕೆಲಸ ಮಾಡಿ ಕುಟುಂಬವನ್ನು ನಡೆಸುತ್ತಿದ್ದಾರೆ. ಇಂತಹ ಆರ್ಥಿಕ ಸಂಕಷ್ಟಗಳ ನಡುವೆಯೂ ಮಗನ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಬರದಂತೆ ಪೋಷಕರು ಶ್ರಮಿಸಿದ್ದು, ಇಂದು ಅದರ ಫಲವಾಗಿ ಭರತ್ ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ.&lt;/p&gt;&lt;p&gt;ಈ ಬಗ್ಗೆ ಮಾತನಾಡಿದ ಭರತ್, &ldquo;ನನ್ನ ತಂದೆ ಗ್ಯಾರೇಜ್&zwnj;ನಲ್ಲಿ ಮೆಕ್ಯಾನಿಕ್ ಆಗಿ ದುಡಿಯುತ್ತಾರೆ. ತಾಯಿ ಅಡುಗೆ ಕೆಲಸ ಮಾಡಿ ನನ್ನನ್ನು ಓದಿಸಿದ್ದಾರೆ. ಅವರ ಪರಿಶ್ರಮವೇ ನನಗೆ ಪ್ರೇರಣೆ. ನಾನು 98% ಅಂಕಗಳನ್ನು ಪಡೆದಿದ್ದೇನೆ. ಇನ್ನೂ ಹೆಚ್ಚು ಅಂಕಗಳು ಬರಬೇಕೆಂದು ನಿರೀಕ್ಷಿಸಿದ್ದೆ. ಆದ್ದರಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದಾಗಿ ಯೋಚಿಸುತ್ತಿದ್ದೇನೆ&rdquo; ಎಂದು ಹೇಳಿದ್ದಾರೆ.&lt;/p&gt;&lt;p&gt;ಮುಂದಿನ ವಿದ್ಯಾಭ್ಯಾಸದ ಬಗ್ಗೆ ಮಾತನಾಡಿದ ಅವರು, &ldquo;ನನಗೆ ವೈದ್ಯರಾಗುವ ಅಥವಾ ಉದ್ಯಮಿಯಾಗುವ ಕನಸಿದೆ. ಆದರೆ ವಿಜ್ಞಾನ ವಿಭಾಗಕ್ಕೆ ಸೇರ್ಪಡೆಯಾಗಲು ಅಗತ್ಯವಿರುವ ಶುಲ್ಕ ಕಟ್ಟಲು ನಮ್ಮಲ್ಲಿ ಹಣದ ಕೊರತೆ ಇದೆ. ಆದರೂ ನಾನು ಪಡೆದ ಅಂಕಗಳ ಆಧಾರದ ಮೇಲೆ ಮುಂದಿನ ಅವಕಾಶಗಳನ್ನು ಹುಡುಕಲು ಪ್ರಯತ್ನಿಸುತ್ತೇನೆ&rdquo; ಎಂದು ತಮ್ಮ ಸಂಕಲ್ಪವನ್ನು ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;ಭರತ್ ಅವರ ಸಾಧನೆ, ಆರ್ಥಿಕ ಅಡಚಣೆಗಳು ಇದ್ದರೂ ದಿಟ್ಟ ಮನಸ್ಸು ಮತ್ತು ಪರಿಶ್ರಮದಿಂದ ದೊಡ್ಡ ಗುರಿಗಳನ್ನು ಸಾಧಿಸಬಹುದು ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಿಯಾದ ಪ್ರೋತ್ಸಾಹ ಮತ್ತು ಸಹಾಯ ದೊರೆತರೆ ಅವರು ಇನ್ನಷ್ಟು ಎತ್ತರಗಳನ್ನು ಮುಟ್ಟುವುದು ಖಚಿತ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/education/balloon-seller-daughter-secures-state-2nd-rank-in-sslc-2026-inspiring-success-story-from-tumakuru-gdp/articleshow-z20hhvi"/>
        </item>
    </channel>
</rss>
