<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Wed, 01 Apr 2026 15:15:16 +0530</lastBuildDate>
        <atom:link href="https://kannada.asianetnews.com/rss/haveri" rel="self" type="application/rss+xml"/>
        <item>
            <title><![CDATA[ಹಾವೇರಿಯ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ; ಸುಟ್ಟು ಭಸ್ಮವಾದ ನೂರಾರು ಎಕರೆ ಅರಣ್ಯ!]]></title>
            <link>https://kannada.asianetnews.com/haveri/haveri-ranebennur-bettada-malleshwara-hill-forest-fire-mischief-wildlife-san/articleshow-2b34cup</link>
            <guid isPermaLink="true">https://kannada.asianetnews.com/haveri/haveri-ranebennur-bettada-malleshwara-hill-forest-fire-mischief-wildlife-san/articleshow-2b34cup</guid>
            <pubDate>Sat, 21 Mar 2026 21:18:30 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಪ್ರಸಿದ್ಧ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಈ ದುರ್ಘಟನೆಯಿಂದ ಅಪರೂಪದ ಸಸ್ಯ ಸಂಪತ್ತು ನಾಶವಾಗಿದ್ದು, ಕೃಷ್ಣಮೃಗ ಸೇರಿದಂತೆ ಅನೇಕ ವನ್ಯಜೀವಿಗಳು ಪ್ರಾಣಭಯದಲ್ಲಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km8h4jepf8gc1ts49yp9zxbc,imgname-haveri-forest-fire-1774107904470.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.21): &lt;/strong&gt;ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಅರಣ್ಯ ಪ್ರದೇಶವಾದ ಬೆಟ್ಟದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ರಾಣೇಬೆನ್ನೂರು ತಾಲ್ಲೂಕಿನ ಆರೇಮಲ್ಲಾಪುರ ಹಾಗೂ ಐರಣಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಬೆಟ್ಟದ ಮಲ್ಲೇಶ್ವರ ಗುಡ್ಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೇಸಿಗೆಯ ಬಿಸಿಲಿಗೆ ಒಣಗಿದ್ದ ಗಿಡಗಂಟೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ, ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಅರಣ್ಯಧಾಮವನ್ನು ಆವರಿಸಿದೆ. ಈ ಗುಡ್ಡವು ಅಪರೂಪದ ವನಸ್ಪತಿ ಗಿಡಮೂಲಿಕೆಗಳಿಂದ ಸಂಪದ್ಭರಿತವಾಗಿದ್ದು, ಬೆಂಕಿಯ ಅಬ್ಬರಕ್ಕೆ ಅಮೂಲ್ಯ ಸಸ್ಯಸಂಪತ್ತು ನಾಶವಾಗಿದೆ.&lt;/p&gt;&lt;h2&gt;&lt;strong&gt;ವನ್ಯಜೀವಿಗಳಿಗೆ ಆಪತ್ತು&lt;/strong&gt;&lt;/h2&gt;&lt;p&gt;ಈ ಭಾಗವು ಕೃಷ್ಣಮೃಗಗಳು ಸೇರಿದಂತೆ ಹತ್ತಾರು ಪ್ರಾಣಿ-ಪಕ್ಷಿಗಳ ವಾಸಸ್ಥಾನವಾಗಿರುವ ಅಭಯಾರಣ್ಯವಾಗಿದೆ. ಧಗಧಗನೆ ಉರಿಯುತ್ತಿರುವ ಬೆಂಕಿಯಿಂದಾಗಿ ವನ್ಯಜೀವಿಗಳು ಪ್ರಾಣಭಯದಲ್ಲಿ ದಿಕ್ಕಾಪಾಲಾಗಿ ಓಡುತ್ತಿವೆ. ವಿಶೇಷವೆಂದರೆ, ಸರ್ಕಾರವು ಇತ್ತೀಚೆಗಷ್ಟೇ ಈ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿತ್ತು. ಆದರೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ಪರಿಸರ ಪ್ರೇಮಿಗಳಲ್ಲಿ ಆಕ್ರೋಶ ಮೂಡಿದೆ.&lt;/p&gt;&lt;p&gt;ಪ್ರಸ್ತುತ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>haveri</category>
            <dc:creator>Santosh Naik</dc:creator>
            <atom:link href="https://kannada.asianetnews.com/haveri/haveri-ranebennur-bettada-malleshwara-hill-forest-fire-mischief-wildlife-san/articleshow-2b34cup"/>
        </item>
        <item>
            <title><![CDATA[Haveri: ಸೇಮ್‌ ಟು ಸೇಮ್‌ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!]]></title>
            <link>https://kannada.asianetnews.com/karnataka-districts/haveri-love-story-parents-kidnap-married-daughter-manikantha-srushti-san/articleshow-2iyf0yu</link>
            <guid isPermaLink="true">https://kannada.asianetnews.com/karnataka-districts/haveri-love-story-parents-kidnap-married-daughter-manikantha-srushti-san/articleshow-2iyf0yu</guid>
            <pubDate>Wed, 04 Mar 2026 20:06:07 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ 'ಚೆಲುವಿನ ಚಿತ್ತಾರ' ಸಿನಿಮಾದಂತೆಯೇ ಘಟನೆಯೊಂದು ನಡೆದಿದೆ. ಪೋಷಕರ ವಿರೋಧದ ನಡುವೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ಸೃಷ್ಟಿ ಮತ್ತು ಮಣಿಕಂಠ ಜೋಡಿಯನ್ನು, ಯುವತಿಯ ಪೋಷಕರೇ ಬಲವಂತವಾಗಿ ಬೇರ್ಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjwm4pakqvb7qx39v0mq00sp,imgname-haveri-case-1772634659155.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.4): &lt;/strong&gt;ಕನ್ನಡದ ಸೂಪರ್&zwnj;ಹಿಟ್&zwnj; ಸಿನಿಮಾ ಚೆಲುವಿನ ಚಿತ್ತಾರದ ಕಥೆಯನ್ನೇ ನೆನಪಿಸುವಂಥ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.. ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಸಿನಿಮೀಯ ಶೈಲಿಯ ಲವ್ ಸ್ಟೋರಿಯೊಂದು ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯನ್ನು ಪೋಷಕರೇ ಬಲವಂತವಾಗಿ ಬೇರ್ಪಡಿಸಿದ ಘಟನೆ ವರದಿಯಾಗಿದೆ. ತಿಳವಳ್ಳಿ ಗ್ರಾಮದ ಮಣಿಕಂಠ ಮತ್ತು ಸೃಷ್ಟಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ, ಈ ಜೋಡಿ ಇತ್ತೀಚೆಗಷ್ಟೇ ಕಾನೂನುಬದ್ಧವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮದುವೆಯ ನಂತರ ಸೃಷ್ಟಿ ತನ್ನ ಪತಿ ಮಣಿಕಂಠನ ಮನೆಯಲ್ಲಿ ವಾಸವಿದ್ದರು. ಆದರೆ, ಮಗಳ ಈ ನಿರ್ಧಾರದಿಂದ ಆಕ್ರೋಶಗೊಂಡಿದ್ದ ಆಕೆಯ ತಂದೆ ಮತ್ತು ಸಂಬಂಧಿಕರು ಮಣಿಕಂಠನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ.&lt;/p&gt;&lt;h2&gt;&lt;strong&gt;ಸಿನಿಮೀಯ ಮಾದರಿಯಲ್ಲಿ ಮಗಳ ಅಪಹರಣ&lt;/strong&gt;&lt;/h2&gt;&lt;p&gt;ಯುವಕನ ಮನೆಗೆ ಏಕಾಏಕಿ ನುಗ್ಗಿದ ಸೃಷ್ಟಿಯ ತಂದೆ ಮತ್ತು ಸಂಬಂಧಿಕರು, ಮಣಿಕಂಠನ ಮನೆಯವರ ಮೇಲೆ ಹಲ್ಲೆ ನಡೆಸಿ, ಸೃಷ್ಟಿಯನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. &quot;ನಾನು ಪ್ರೀತಿಸಿ ಮದುವೆಯಾಗಿದ್ದೇನೆ, ನನಗೆ ನನ್ನ ಗಂಡ ಬೇಕು&quot; ಎಂದು ಸೃಷ್ಟಿ ಅಪ್ಪನ ಮುಂದೆ ಕೈಮುಗಿದು, ಕಣ್ಣೀರಿಟ್ಟು ಗೋಳಾಡಿದರೂ ಕಟುಕ ಪೋಷಕರ ಮನಸ್ಸು ಕರಗಲಿಲ್ಲ. ಮಗಳನ್ನು ಸಿನಿಮೀಯ ಶೈಲಿಯಲ್ಲಿ ಹೊಡೆದು, ಹಿಂಸಿಸಿ ವಾಹನಕ್ಕೆ ಹಾಕಿಕೊಂಡು ಹೋಗಿರುವ ದೃಶ್ಯಗಳು ಮೊಬೈಲ್&zwnj;ನಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.&lt;/p&gt;&lt;h2&gt;&lt;strong&gt;ಪೊಲೀಸರ ನಡೆಗೆ ಆಕ್ರೋಶ&lt;/strong&gt;&lt;/h2&gt;&lt;p&gt;ಈ ಅಮಾನವೀಯ ಕೃತ್ಯದ ಬಳಿಕ ನೊಂದ ಮಣಿಕಂಠ ಮತ್ತು ಆತನ ಕುಟುಂಬಸ್ಥರು ದೂರು ನೀಡಲು ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಗೆ ಧಾವಿಸಿದ್ದರು. ಆದರೆ, ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಸಂವಿಧಾನಬದ್ಧವಾಗಿ ಮದುವೆಯಾಗುವ ಹಕ್ಕು ಹೊಂದಿದ್ದರೂ, ಪೊಲೀಸರು ರಕ್ಷಣೆ ನೀಡದೆ ನಿರ್ಲಕ್ಷ್ಯ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಸ್ತುತ ಸೃಷ್ಟಿಯನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಪ್ರೀತಿಸಿ ಮದುವೆಯಾದ ಮಗಳ ಸಂಸಾರಕ್ಕೆ ಹೆತ್ತವರೇ ವಿಲನ್ ಆಗಿರುವುದು ಈ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>haveri</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/haveri-love-story-parents-kidnap-married-daughter-manikantha-srushti-san/articleshow-2iyf0yu"/>
        </item>
        <item>
            <title><![CDATA[ಮಾಲೀಕ ಆಸ್ಪತ್ರೆಯಲ್ಲಿದ್ದಾಗ ಕುರಿ ಶೆಡ್‌ಗೆ ಬೆಂಕಿ: 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ]]></title>
            <link>https://kannada.asianetnews.com/state/haveri-sheep-shed-catches-fire-while-owner-in-hospital-30-sheep-burnt-alive/articleshow-2ue9mxq</link>
            <guid isPermaLink="true">https://kannada.asianetnews.com/state/haveri-sheep-shed-catches-fire-while-owner-in-hospital-30-sheep-burnt-alive/articleshow-2ue9mxq</guid>
            <pubDate>Wed, 04 Mar 2026 08:50:46 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ಕುರಿ ಶೆಡ್&zwnj;ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನವಾಗಿವೆ. ಮಾಲೀಕ ಹುಚ್ಚಪ್ಪ ಮುದ್ದಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjvdh4tntaqvvwcaw0g59ddm,imgname-fire-accident-1772594172756.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಕುರಿ ಶೆಡ್&zwnj;ಗೆ ಬೆಂಕಿ: 30 ಕುರಿಗಳ ಸಜೀವ ದಹನ:&lt;/strong&gt;&lt;/h2&gt;&lt;p&gt;ಹಾವೇರಿ: ಕುರಿಗಳಿದ್ದ ಶೆಡ್&zwnj;ಗೆ ಬೆಂಕಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ. ಕುರಿಗಳಿದ್ದ ಶೆಡ್&zwnj;ಗೆ ಆಕ್ಮಸಿಕವಾಗಿ ಬೆಂಕಿ ಬಿದ್ದು 30ಕ್ಕೂ ಹೆಚ್ಚು ಕುರಿಗಳು ಭಸ್ಮವಾಗಿದ್ದು, ಶೆಡ್ ಬಳಿ ಮಾಲೀಕರಿಲ್ಲದಿರುವಾಗಲೇ ಈ ಅನಾಹುತ ಸಂಭವಿಸಿದೆ. ಕುರಿ ಶೆಡ್ ಧಗ ಧಗನೇ ಹೊತ್ತಿ ಉರಿದಿದ್ದು, 30ಕ್ಕೂ ಹೆಚ್ಚು ಕುರಿಗಳು ಸುಟ್ಟು ಕರಕಲಾಗಿರುವೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾದ ಕುರಿಗಳ ದೇಹ ನೋಡುಗರ ಕಣ್ಣಂಚನ್ನು ತೇವಗೊಳಿಸಿದೆ.&lt;/p&gt;&lt;p&gt;ಹುಚ್ಚಪ್ಪ ಮುದ್ದಿ ಎಂಬುವರಿಗೆ ಸೇರಿದ ಕುರಿಗಳು ಇವಾಗಿವೆ. ಮಾಲೀಕ ಹುಚ್ಚಪ್ಪ ಅವರು ಅನಾರೋಗ್ಯಕ್ಕೀಡಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಈ ಬೆಂಕಿ ದುರಂತ ಸಂಭವಿಸಿದ್ದು, ಕುರಿಗಳು ಸಜೀವ ದಹನಗೊಂಡಿವೆ. ಕುರಿಗಳಿದ್ದ ಶೆಡ್ ಕೂಡ ಬೆಂಕಿಗಾಹುತಿಯಾಗಿದೆ. ಬೆಂಕಿಯಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ದುರಂತದಲ್ಲಿ ಕುರಿಗಳನ್ನು ಕಳೆದುಕೊಂಡ ರೈತನಿಗೆ ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಸ್ಥಳೀಯ ಜನರು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸೋಮವಾರಪೇಟೆ: ಮನೆಯಲ್ಲಿ ಆಕಸ್ಮಿಕ ಬೆಂಕಿ: ಒಂದು ಕಾಲು ಕಳೆದುಕೊಂಡಿದ್ದ ಯೋಧ ಹೊರ ಬಾರಲಾಗದೇ ಸಜೀವ ದಹನ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Anusha Kb</dc:creator>
            <atom:link href="https://kannada.asianetnews.com/state/haveri-sheep-shed-catches-fire-while-owner-in-hospital-30-sheep-burnt-alive/articleshow-2ue9mxq"/>
        </item>
        <item>
            <title><![CDATA[ನಗಲೇ ಇಲ್ಲ ರತಿ ಮನ್ಮಥರು- ಮೌನ ಶಪಥ, ಯಾರಿಗೂ ಸಿಗದ ₹ 13 ಲಕ್ಷ ಬಹುಮಾನ]]></title>
            <link>https://kannada.asianetnews.com/karnataka-districts/rati-manmatha-couple-didnt-even-smile-silent-vow-leaves/articleshow-4hix16a</link>
            <guid isPermaLink="true">https://kannada.asianetnews.com/karnataka-districts/rati-manmatha-couple-didnt-even-smile-silent-vow-leaves/articleshow-4hix16a</guid>
            <pubDate>Thu, 05 Mar 2026 05:16:04 +0530</pubDate>
            <description><![CDATA[&lt;p&gt;ರಾಣಿಬೆನ್ನೂರು ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ರಾಣಿಬೆನ್ನೂರು ನಗರದಲ್ಲಿ ಕುಳ್ಳರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆ ಮುಂದುವರಿಸಿಕೊಂಡು ಬಂದಿದ್ದಾರೆ. ₹13 ಲಕ್ಷ ಬಹುಮಾನ ಗೆಲ್ಲಲೂ ಯಾರಿಗೂ ಸಾಧ್ಯವಾಗಲಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjkm65d9d0c7hewt17p859pd,imgname-rati-manmatha--1772332717481.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಣಿಬೆನ್ನೂರು:&lt;/strong&gt; ಇಲ್ಲಿನ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ಕುಳ್ಳರಿಸಿದ್ದ ಜೀವಂತ ರತಿ-ಮನ್ಮಥರು ಈ ಬಾರಿಯೂ ನಗು ಚಿಮ್ಮಿಸದೇ ತಮ್ಮ ದಾಖಲೆ ಮುಂದುವರಿಸಿಕೊಂಡು ಬಂದಿದ್ದಾರೆ.&lt;/p&gt;&lt;p&gt;ನಗಿಸಲು ಹೋದವರೆ ನಗೆಪಾಟಲಿಗೆ ಈಡಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹೀಗಾಗಿ ಯಾರಿಗೂ ಹೋಳಿ ಬಂಪರ್ ಬಹುಮಾನದ ಮೊತ್ತ ₹13 ಲಕ್ಷ ದಕ್ಕಲಿಲ್ಲ.&lt;/p&gt;&lt;p&gt;ಈ ಹಿಂದಿನ 66 ವರ್ಷಗಳಂತೆ ಈ ವರ್ಷವೂ ಓಕುಳಿ ಮುನ್ನಾದಿನವಾದ ಮಂಗಳವಾರ ರಾತ್ರಿ (ಮಾ. 3) 8.45ಕ್ಕೆ ಜೀವಂತ ರತಿ-ಮನ್ಮಥ ಪಾತ್ರಧಾರಿಗಳನ್ನು ಕುಳ್ಳರಿಸಲಾಗಿತ್ತು. ಅವರನ್ನು ನಗಿಸಲೆಂದು ವಿವಿಧ ಪ್ರದೇಶಗಳ ಹಲವಾರು ಜನರು ಮುಂಚಿತವಾಗಿಯೇ ಇಲ್ಲಿಗೆ ಬಂದು ಜಮಾಯಿಸಿದ್ದರು. ಯಾರು ಎಷ್ಟೆ ಪ್ರಯತ್ನಿಸಿದರೂ ರತಿ-ಮನ್ಮಥರು ನಗುವಿನ ಯಾವುದೇ ಭಾವನೆಗಳನ್ನು ವ್ಯಕ್ತಪಡಿಸದೆ ಗಂಭೀರವದನರಾಗಿ ಆಸೀನರಾಗಿದ್ದರು. ನಗಿಸಲು ಹೋದವರು ಪೇಚಿಗೆ ಸಿಗುತ್ತಿದ್ದರು. ನನ್ನ ಮದುವೆಗೆ ಬಂಗಾರ ಖರೀದಿಸಬೇಕಾಗಿದೆ ನೀವು ನಕ್ಕರೆ ಅನುಕೂಲವಾಗುತ್ತದೆ, ದಯಮಾಡಿ ನಕ್ಕ ಬಿಡ್ರಪ್ಪಾ ಎಂದು ಯುವತಿಯೊಬ್ಬರು ಪರಿಪರಿಯಾಗಿ ಬೇಡುತ್ತಿರುವ ದೃಶ್ಯ ಸಭಿಕರಲ್ಲಿ ನಗು ಉಕ್ಕಿಸಿತೆ ಹೊರತು ರತಿ-ಮನ್ಮಥರು ಮಾತ್ರ ಗಂಭೀರವಾಗಿಯೇ ಕುಳಿತಿದ್ದರು. ಬೆಳಗಾವಿಯಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಆಂಗಿಕ ಹಾವಭಾವದ ಮೂಲಕ ನಗಿಸಲು ಪ್ರಯತ್ನಿಸಿದರೂ ಅದರಲ್ಲಿ ಯಶ ಸಿಗಲಿಲ್ಲ.&lt;/p&gt;&lt;h2&gt;&lt;strong&gt;ಗಮನ ಸೆಳೆದ ಹಲಗೆ ನಿನಾದ:&lt;/strong&gt;&lt;/h2&gt;&lt;p&gt;ರತಿ-ಮನ್ಮಥರ ವೀಕ್ಷಣೆಗೆ ನಗರದ ವಿವಿಧ ಭಾಗಗಳಿಂದ ಯುವಕರ ಹಿಂಡು ವೈವಿಧ್ಯಮಯವಾಗಿ ಹಲಗೆ ಬಾರಿಸುತ್ತಾ ತಂಡೋಪತಂಡವಾಗಿ ಇಲ್ಲಿಗೆ ಭೇಟಿ ನೀಡಿದರು.&lt;/p&gt;&lt;h3&gt;ಬಂದೋಬಸ್ತ್:&lt;/h3&gt;&lt;p&gt;ರತಿ-ಮನ್ಮಥರ ವೀಕ್ಷಣೆಗೆ ಬರುವ ಜನರನ್ನು ನಿಯಂತ್ರಿಸುವ ಸಲುವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಮಹಿಳೆಯರಿಗೆ ವೀಕ್ಷಣೆಗಾಗಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಒಟ್ಟಿನಲ್ಲಿ ನಗರದಲ್ಲಿ ಜೀವಂತ ರತಿ-ಮನ್ಮಥರು ತಮ್ಮ ಮೌನದ ಶಪಥ ಈ ಬಾರಿಯೂ ಮುಂದುವರಿಯಿತು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rati-manmatha-couple-didnt-even-smile-silent-vow-leaves/articleshow-4hix16a"/>
        </item>
        <item>
            <title><![CDATA[ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ರೈಲು, ಒಟ್ಟು 9 ಟ್ರಿಪ್‌, ಕರ್ನಾಟಕದ ಈ ಎಲ್ಲಾ ಜಿಲ್ಲೆಗಳಲ್ಲಿ ಹಾದು ಹೋಗಲಿದೆ!]]></title>
            <link>https://kannada.asianetnews.com/state/hubballi-to-rameswaram-special-train-announced-9-summer-trips-by-south-western-railway-gdp/articleshow-5trwb39</link>
            <guid isPermaLink="true">https://kannada.asianetnews.com/state/hubballi-to-rameswaram-special-train-announced-9-summer-trips-by-south-western-railway-gdp/articleshow-5trwb39</guid>
            <pubDate>Wed, 25 Mar 2026 08:15:48 +0530</pubDate>
            <description><![CDATA[ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಶ್ರೀಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಈ ರೈಲು (07355/07356) ಏಪ್ರಿಲ್&zwnj;ನಿಂದ ಜೂನ್&zwnj;ವರೆಗೆ ಒಟ್ಟು 9 ಟ್ರಿಪ್&zwnj;ಗಳನ್ನು ಮಾಡಲಿದ್ದು, ಹಾವೇರಿ, ದಾವಣಗೆರೆ, ತುಮಕೂರು, ಸೇಲಂ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲ್ಲಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kj7xvae990vg1k41hbrwb5jh,imgname-gangavati-railway-1771940194761.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಶ್ರೀಸಿದ್ಧಾರೂಢ ಸ್ವಾಮೀಜಿ (ಎಸ್&zwnj;ಎಸ್&zwnj;ಎಸ್) ಹುಬ್ಬಳ್ಳಿ ಜಂಕ್ಷನ್ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಒಟ್ಟು 9 ಟ್ರಿಪ್&zwnj;ಗಳ ಸಾಪ್ತಾಹಿಕ ವಿಶೇಷ ಎಕ್ಸ್&zwnj;ಪ್ರೆಸ್ ರೈಲುಗಳನ್ನು ಸಂಚರಿಸಲು ರೈಲ್ವೆ ಇಲಾಖೆ ಪ್ರಕಟಣೆ ನೀಡಿದೆ.&lt;/p&gt;&lt;h2&gt;ರೈಲು ಸಂಖ್ಯೆ ಹೀಗಿದೆ&lt;/h2&gt;&lt;p&gt;ರೈಲು ಸಂಖ್ಯೆ 07355 ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ&ndash;ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಏಪ್ರಿಲ್ 5, 12, 19, 26 ಹಾಗೂ ಮೇ 3, 10, 17, 24 ಮತ್ತು 31ರಂದು ಪ್ರತೀ ಭಾನುವಾರ ಬೆಳಗ್ಗೆ 6.50ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದೆ. ಈ ರೈಲು ಮರುದಿನ ಬೆಳಗ್ಗೆ 5.20ಕ್ಕೆ ರಾಮೇಶ್ವರಂ ತಲುಪುವಂತೆ ವೇಳಾಪಟ್ಟಿ ರೂಪಿಸಲಾಗಿದೆ.&lt;/p&gt;&lt;p&gt;ಇದರ ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 07356 ರಾಮೇಶ್ವರಂ&ndash;ಎಸ್&zwnj;ಎಸ್&zwnj;ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್&zwnj;ಪ್ರೆಸ್ ರೈಲು ಏಪ್ರಿಲ್ 6, 13, 20, 27 ಹಾಗೂ ಮೇ 4, 11, 18, 25 ಮತ್ತು ಜೂನ್ 1ರಂದು ಪ್ರತೀ ಸೋಮವಾರ ರಾತ್ರಿ 8 ಗಂಟೆಗೆ ರಾಮೇಶ್ವರಂನಿಂದ ಹೊರಡಲಿದೆ. ಈ ರೈಲು ಮರುದಿನ ರಾತ್ರಿ 7.40ಕ್ಕೆ ಹುಬ್ಬಳ್ಳಿ ತಲುಪಲಿದೆ.&lt;/p&gt;&lt;h2&gt;ಯಾವೆಲ್ಲ ನಿಲ್ದಾಣಗಳಲ್ಲಿ ಪ್ರಯಾಣ&lt;/h2&gt;&lt;p&gt;ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಹಲವಾರು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ತುಮಕೂರು, ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ನಾಮಕ್ಕಲ್, ಕರೂರು, ತಿರುಚ್ಚಿರಾಪಳ್ಳಿ, ಪುದುಕ್ಕೊಟ್ಟೈ, ಕಾರೈಕುಡಿ, ಶಿವಗಂಗಾ, ಮನಮಧುರೈ ಹಾಗೂ ರಾಮನಾಥಪುರಂ ನಿಲ್ದಾಣಗಳಲ್ಲಿ ಈ ರೈಲು ನಿಲ್ಲಲಿದೆ.&lt;/p&gt;&lt;p&gt;ಪ್ರಯಾಣಿಕರ ಅನುಕೂಲಕ್ಕಾಗಿ ಈ ರೈಲುಗಳಲ್ಲಿ ವಿವಿಧ ವರ್ಗಗಳ ಬೋಗಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಒಂದು ಎಸಿ ಫಸ್ಟ್ ಕ್ಲಾಸ್, 2 ಎಸಿ ಟು-ಟೈರ್, 3 ಎಸಿ ತ್ರೀ-ಟೈರ್, 6 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಸೇರಿದಂತೆ ಒಂದು ಪ್ಯಾಂಟ್ರಿ ಕಾರ್, ಒಂದು ಜನರೇಟರ್-ಕಮ್-ಬ್ರೇಕ್ ವ್ಯಾನ್ ಹಾಗೂ ಒಂದು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಸೌಲಭ್ಯಗಳೊಂದಿಗೆ) ಸೇರಿವೆ.&lt;/p&gt;&lt;p&gt;ಈ ವಿಶೇಷ ರೈಲುಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಈಗಾಗಲೇ ಪ್ರಾರಂಭಗೊಂಡಿದ್ದು, ಪ್ರಯಾಣಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ನೈಋತ್ಯ ರೈಲ್ವೆ ಮನವಿ ಮಾಡಿದೆ. ಬೇಸಿಗೆ ರಜೆ ಪ್ರಯಾಣವನ್ನು ಸುಗಮಗೊಳಿಸುವ ಈ ಯೋಜನೆಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/state/hubballi-to-rameswaram-special-train-announced-9-summer-trips-by-south-western-railway-gdp/articleshow-5trwb39"/>
        </item>
        <item>
            <title><![CDATA[ಜೀವಂತ ರತಿ-ಮನ್ಮಥರನ್ನು ನಗಿಸಿ 13 ಲಕ್ಷ ಬಹುಮಾನ ಪಡೆಯಿರಿ; 67 ವರ್ಷದಿಂದ ಯಾರಿಗೂ ಸಾಧ್ಯವಾಗಿಲ್ಲ]]></title>
            <link>https://kannada.asianetnews.com/karnataka-districts/holi-festival-special-make-rati-manmatha-laugh-and-get-a-prize-of-rs-13-lakhs-ranebennur-haveri-mrq/articleshow-f2tfe3m</link>
            <guid isPermaLink="true">https://kannada.asianetnews.com/karnataka-districts/holi-festival-special-make-rati-manmatha-laugh-and-get-a-prize-of-rs-13-lakhs-ranebennur-haveri-mrq/articleshow-f2tfe3m</guid>
            <pubDate>Sun, 01 Mar 2026 08:11:16 +0530</pubDate>
            <description><![CDATA[&lt;p&gt;ರಾಣಿಬೆನ್ನೂರಿನಲ್ಲಿ ಹೋಳಿ ಹಬ್ಬದ ಮುನ್ನಾದಿನ ಜೀವಂತ ರತಿ-ಮನ್ಮಥರನ್ನು ಕೂರಿಸುವ ವಿಶಿಷ್ಟ ಕಾರ್ಯಕ್ರಮ ನಡೆಯುತ್ತದೆ. ಇವರನ್ನು ನಗಿಸಿದವರಿಗೆ ಲಕ್ಷಾಂತರ ರೂಪಾಯಿ ಬಹುಮಾನ ಘೋಷಿಸಲಾಗಿದ್ದರೂ, ಕಳೆದ 67 ವರ್ಷಗಳಿಂದ ಯಾರೂ ಈ ಸವಾಲಿನಲ್ಲಿ ಯಶಸ್ವಿಯಾಗಿಲ್ಲ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjkm65d9d0c7hewt17p859pd,imgname-rati-manmatha--1772332717481.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಸವರಾಜ ಸರೂರ&lt;/strong&gt;&lt;/p&gt;&lt;p&gt;&lt;strong&gt;ಹಾವೇರಿ: &lt;/strong&gt;ಇತ್ತೀಚಿನ ದಿನಗಳಲ್ಲಿ ಮನುಷ್ಯ ಯಾಂತ್ರಿಕತೆ ಹಾಗೂ ಒತ್ತಡದ ಜೀವನಶೈಲಿಯಿಂದ ಬಳಲಿ ಬೆಂಡಾಗಿದ್ದು, ಅದನ್ನು ದೂರ ಮಾಡಿ ಶಾಂತಿ ನೆಮ್ಮದಿ ನೀಡಲು ನಗುವೊಂದೇ ಸೂಕ್ತ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಹಾವೇರಿ ಜಿಲ್ಲೆ ರಾಣಿಬೆನ್ನೂರು ನಗರದಲ್ಲಿ ಹೋಳಿ ಹಬ್ಬದ ಮುನ್ನಾದಿನ ಪ್ರತಿಷ್ಠಾಪಿಸಲಾಗುವ ಜೀವಂತ ರತಿ-ಮನ್ಮಥರ ನಗಿಸುವ ಕಾರ್ಯಕ್ರಮ ಬಹುವೈಶಿಷ್ಟ್ಯಪೂರ್ಣವಾಗಿದೆ.&lt;/p&gt;&lt;p&gt;ಈ ಬಾರಿ ಮಾ. 3ರಂದು ಸಂಜೆ 6.30ರಿಂದ ರಾತ್ರಿ 12ರ ವರೆಗೆ ನಗರದ ಶ್ರೀ ರಾಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಭೀಮಲಿಂಗೇಶ್ವರ ಸೇವಾ ಸಮಿತಿ, ಶ್ರೀ ಶಕ್ತಿ ಯುವಕ ಸಂಘ ಹಾಗೂ ಜೆಬಿಸಿಸಿ ಯುವಕ ಮಂಡಳಿ ವತಿಯಿಂದ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಜೀವಂತ ರತಿ ಮನ್ಮಥರನ್ನು ಕುಳ್ಳರಿಸಲಾಗುತ್ತದೆ.&lt;/p&gt;&lt;h2&gt;&lt;strong&gt;ವೈವಿಧ್ಯಮಯ ಮಾತುಗಳು&lt;/strong&gt;&lt;/h2&gt;&lt;p&gt;ರತಿ ಮನ್ಮಥರನ್ನು ನಗಿಸಲು ಜನರು ಮಾಡುವ ಕಸರತ್ತುಗಳು ವೈಶಿಷ್ಟ್ಯಪೂರ್ಣವಾಗಿರುತ್ತವೆ. ಆದರೆ ಅವರ ಪ್ರಯತ್ನ ಹೊಳೆಯಲ್ಲಿ ನಿರರ್ಥಕವಾಗುತ್ತದೆಯೇ ಹೊರತು ನಗಿಸಲು ಸಾಧ್ಯವಾಗುವುದಿಲ್ಲ. ಕಾಮಣ್ಣಾ ಸ್ವಲ್ಪ ನಕ್ಕರ ನಗಪಾ, ಯಾತಕ್ಕ್ ಚಿಂತಿ ಮಾಡತಿ? ನಮ್ಮವರು ಟಿ20 ವಿಶ್ವಕಪ್ ಮತ್ತ್ ಗೆಲ್ಲೋ ಚಿಂತಿ ಐತ್ಯೇನ್? ಅದಕ್ಯಾಕ್ ತಲಿ ಕೆಡಿಸಿಕೊಂಡಿ, ಯವ್ವಾ ರತಿದೇವಿ ನೀನರ್ ಸ್ವಲ್ಪ ನಕ್ಕರ ನಗು, ಬಂಗಾರ ರೇಟ್ ಹೆಚ್ಚಾಗಿದ್ದಕ್ಕ್ ಚಿಂತಿ ಅಗೈತೇನು? ಎಂಬ ತರಹೇವಾರಿ ಮಾತುಗಳು ಇಲ್ಲಿಗೆ ಆಗಮಿಸುವ ಜನರಿಂದ ಕೇಳಿ ಬರುತ್ತವೆ.&lt;/p&gt;&lt;h3&gt;&lt;strong&gt;ನಗೆಪಾಟಲಿಗೆ ಈಡಾಗುವ ಜನತೆ&lt;/strong&gt;&lt;/h3&gt;&lt;p&gt;ರತಿ ಕಾಮಣ್ಣರನ್ನು ನಗಿಸಲು ಉತ್ಸಾಹದಿಂದ ಇಲ್ಲಿಗೆ ಬರುವ ಜನ ತಾವೇ ನಗೆಪಾಟಲಿಗಿಡಾಗುವ ಪ್ರಸಂಗಗಳು ನೋಡುಗರಲ್ಲಿ ಮೋಜು ಉಂಟು ಮಾಡುತ್ತವೆ. ವಯಸ್ಸು ಹಾಗೂ ಲಿಂಗ ಭೇದವಿಲ್ಲದೆ ಅನೇಕರು ವಿಚಿತ್ರ ಹಾವಭಾವ ಕೂಡ ಪ್ರದರ್ಶಿಸುತ್ತಾ ಹಾಸ್ಯ ಚಟಾಕಿಗಳನ್ನು ಹಾರಿಸುತ್ತಾ ಬಹುಮಾನ ಗೆಲ್ಲಲು ಪ್ರಯತ್ನ ಪಟ್ಟರೂ ಫಲಿತಾಂಶ ಮಾತ್ರ ಶೂನ್ಯ. ರತಿ ಮನ್ಮಥರು ಮಾತ್ರ ಇದಾವುದಕ್ಕೂ ತಲೆಕೆಡಿಸಿಕೊಳ್ಳದೆ ಪರಕಾಯ ಪ್ರವೇಶ ಮಾಡಿದಂತೆ ತಮ್ಮ ಪಾಡಿಗೆ ತಾವು ತದೇಕಚಿತ್ತದಿಂದ ಗಂಭೀರವದನರಾಗಿ ಕುಳಿತುಕೊಂಡಿರುತ್ತಾರೆ.&lt;/p&gt;&lt;h3&gt;&lt;strong&gt;ಜಾತ್ರೆಯ ಅನುಭವ&lt;/strong&gt;&lt;/h3&gt;&lt;p&gt;ಮಹಿಳೆಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನರು ಜೀವಂತ ರತಿ ಮನ್ಮಥರನ್ನು ನೋಡಲು ಸೇರಿರುತ್ತಾರೆ. ವಿವಿಧ ಪ್ರದೇಶಗಳ ಯುವಕರು ಹಲಗೆ ಬಾರಿಸುತ್ತ ಇಲ್ಲಿಗೆ ಬಂದು ಹೋಗುವುದನ್ನು ಕಂಡರೆ ಇಲ್ಲಿ ಒಂದು ಜಾತ್ರೆ ನಡೆದಿದೆಯೇನೋ ಎಂದೆನೆಸುತ್ತದೆ. ಜನರನ್ನು ನಿಯಂತ್ರಿಸುವ ಸಲುವಾಗಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ.&lt;/p&gt;&lt;h3&gt;&lt;strong&gt;ಹಾಗೆ ಉಳಿಯುತ್ತಿರುವ ಬಹುಮಾನ&lt;/strong&gt;&lt;/h3&gt;&lt;p&gt;ನಗಿಸಿದವರಿಗೆ ವಿವಿಧ ಸಂಘ ಸಂಸ್ಥೆಗಳು ಸುಮಾರು ಲಕ್ಷಕ್ಕೂ ಅಧಿಕ ನಗದು ಬಹುಮಾನ ನೀಡುವುದಾಗಿ ತಿಳಿಸಿದರೂ ಸಹ ಕಳೆದ 67 ವರ್ಷಗಳಿಂದ ಯಾರೊಬ್ಬರೂ ಜೀವಂತ ರತಿ ಕಾಮಣ್ಣರನ್ನು ನಗಿಸಿದ ಉದಾಹರಣೆಗಳಿಲ್ಲ. (ಈ ಬಾರಿ ಬಹುಮಾನದ ಮೊತ್ತ 13 ಲಕ್ಷ: ಅಜ್ಜಪ್ಪ ಜಂಬಗಿ ಮೂರು ಲಕ್ಷ, ಎ.ಬಿ. ಪಾಟೀಲ, ಅನಿಲ ಸಿದ್ದಾಳಿ, ಕೊಟ್ರೇಶ ಕೆಂಚಪ್ಪನವರ, ಬಸವರಾಜ ರೊಡ್ಡನವರ, ಸಿದ್ದು ಚಿಕ್ಕಬಿದರಿ ತಲಾ ಒಂದು ಲಕ್ಷ, ಯುವರಾಜ ಬಾರಾಟಕ್ಕಿ, ಕುಮಾರ ಎಳೆಹೊಳಿ, ಪ್ರಭುಸ್ವಾಮಿ ಕರ್ಜಗಿಮಠ, ಶಿವರಾಜ ಬೇತೂರ, ಗಿರೀಶ ಅಡಕಿ, ಬಿ.ಎಂ.ತಾವರಗುಂದಿ, ಶಿವಕುಮಾರ ಹರ್ಕನಾಳ, ಪ್ರಶಾಂತ ಹಿತ್ತಲಮನಿ ತಲಾ 50 ಸಾವಿರ ರು. ಹಾಗೂ ಇತರರು ಒಂದು ಲಕ್ಷ ಒಟ್ಟು 13 ಲಕ್ಷ)&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪ್ರತಿ ಮಂಗಳವಾರ ಇಡೀ ಊರಿಗೆ ಊರೇ ಖಾಲಿ ಖಾಲಿ; ಮನೆ, ಅಂಗಡಿ-ಮುಗ್ಗಟ್ಟುಗಳಿಗೆ ಬೀಗ!&lt;/strong&gt;&lt;/p&gt;&lt;p&gt;ಜೀವಂತ ರತಿ, ಮನ್ಮಥರು ನಗದಿರುವುದು ದಾಖಲೆಯಾಗಿ ಮುಂದುವರೆದಿದೆ. ಇದರ ಮರ್ಮವನ್ನು ಅರಿಯಲು ಸ್ಥಳೀಯ ಜನತೆ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಗಳಿಂದ ಸಾಕಷ್ಟು ಜನ ಇಲ್ಲಿಗೆ ಆಗಮಿಸಿ ಬರಿಗೈಯಲ್ಲಿ ಹಿಂದಿರುಗುವಂತಾಗಿದೆ.&lt;/p&gt;&lt;p&gt;&lt;strong&gt;ಸೋಜಿಗದ ಸಂಗತಿ&lt;/strong&gt;&lt;/p&gt;&lt;p&gt;ಕಳೆದ 27 ವರ್ಷಗಳಿಂದ ಕಾಮನ ವೇಷವನ್ನು ಗದಿಗೆಪ್ಪ ರೊಡ್ಡನವರ ಹಾಗೂ 32 ವರ್ಷಗಳಿಂದ ರತಿ ವೇಷವನ್ನು ಕುಮಾರ ಹಡಪದ ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿರುತ್ತಾರೆ. ಉಳಿದ ದಿನಗಳಲ್ಲಿ ಇವರಿಬ್ಬರೂ ಸಾಕಷ್ಟು ಹಾಸ್ಯಪ್ರಜ್ಞೆ ಹೊಂದಿದ್ದು ರತಿ ಮನ್ಮಥರಾದಾಗ ಪರಕಾಯ ಪ್ರವೇಶ ಮಾಡಿದಂತೆ ನಗೆಯ ಲವಲೇಶವೂ ತಮ್ಮ ಹತ್ತಿರ ಸುಳಿಯದಂತೆ ಕುಳಿತುಕೊಳ್ಳುವ ರೀತಿ ಸಾರ್ವಜನಿಕರಿಗೆ ಕುತೂಹಲದ ಜತೆಗೆ ಸೋಜಿಗ ಉಂಟು ಮಾಡುತ್ತದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹನುಮಂತನಿಗೆ ಸಿಂದೂರ ಅಂದರೆ ಯಾಕೆ ಅಷ್ಟೊಂದು ಇಷ್ಟ?&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/holi-festival-special-make-rati-manmatha-laugh-and-get-a-prize-of-rs-13-lakhs-ranebennur-haveri-mrq/articleshow-f2tfe3m"/>
        </item>
        <item>
            <title><![CDATA[ಡೀಮ್ಡ್ ಫಾರೆಸ್ಟ್ ಪರಿವರ್ತಿಸಿದರೆ ರಾಜ್ಯದಲ್ಲಿ 6 ಲಕ್ಷ ರೈತರಿಗೆ ಅನುಕೂಲ: ಸಂಸದ ಬೊಮ್ಮಾಯಿ]]></title>
            <link>https://kannada.asianetnews.com/politics/deemed-forest-revenue-land-benefit-farmers-basavaraj-bommai-gvd/articleshow-guz09hu</link>
            <guid isPermaLink="true">https://kannada.asianetnews.com/politics/deemed-forest-revenue-land-benefit-farmers-basavaraj-bommai-gvd/articleshow-guz09hu</guid>
            <pubDate>Wed, 11 Mar 2026 00:27:05 +0530</pubDate>
            <description><![CDATA[&lt;p&gt;ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿದರೆ 6 ಲಕ್ಷ ರೈತರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡುತ್ತೇನೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk10h5wga6jbmxg0mwzxph9t,imgname----------------------79--1772781868944.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸವಣೂರು (ಮಾ.11):&lt;/strong&gt; ರಾಜ್ಯದಲ್ಲಿರುವ ಡೀಮ್ಡ್ ಫಾರೆಸ್ಟನ್ನು ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿದರೆ 6 ಲಕ್ಷ ರೈತರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.&lt;/p&gt;&lt;p&gt;ಆಯುಷ್ಮಾನ್ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರು 2017ರಲ್ಲಿ ಪ್ರಾರಂಭ ಮಾಡಿದ್ದರು. ಅದರ ಅನ್ವಯ ತಾವು ಆರೋಗ್ಯ ವಿಮೆಯನ್ನು ಪಡೆಯುತ್ತಿದ್ದೀರಿ. ಇದರಿಂದ ಆರೋಗ್ಯ ಸೇವೆ ದೊರೆಯುವಂತಾಗಿದೆ. ನಮ್ಮ ಗ್ರಾಮೀಣ ಜನರಿಗೆ ಹೆಚ್ಚಿನ ಅನುಕೂಲ ನೀಡಲು ಪ್ರತಿ ಕ್ಷೇತ್ರದಲ್ಲಿ ಎಂಟರಿಂದ ಹತ್ತು ಆಯುಷ್ಮಾನ್ ಕೇಂದ್ರಗಳು ಆರಂಭವಾಗಲಿವೆ. ಇದರ ಉಪಯೋಗ ಎಲ್ಲರಿಗೂ ತಲುಪಲಿ ಎಂದರು.&lt;/p&gt;&lt;p&gt;ಈ ಭಾಗದಲ್ಲಿ ರಸ್ತೆಗಳ ಸಮಸ್ಯೆ ಇದೆ. ನಾನು ಸಿಎಂ ಇದ್ದಾಗ ಪ್ರತಿ ಹೋಬಳಿ ಮತ್ತು ಹಳ್ಳಿಗಳಿಗೆ ದುಡ್ಡು ಕೊಟ್ಟಿದ್ದೆ. ಆದರೂ ರಸ್ತೆ ಹೀಗೆ ಇರುವುದು ಬೇಸರ ತರಿಸಿದೆ. ನನಗೆ ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಕೇಂದ್ರ ಸರ್ಕಾರದ ಸಿಆರ್&zwnj;ಎಫ್ ಫಂಡ್&zwnj;ನಲ್ಲಿ ಸವಣೂರು ಹಾಗೂ ಶಿರಹಟ್ಟಿ ತಾಲೂಕಿನ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುತ್ತೇನೆ ಎಂದರು.&lt;/p&gt;&lt;h2&gt;&lt;strong&gt;ಅಭಿವೃದ್ಧಿಗೆ ಸಮಸ್ಯೆ&lt;/strong&gt;&lt;/h2&gt;&lt;p&gt;ಇನ್ನು ದೇಶದಲ್ಲಿ ಅರಣ್ಯ ಕಾಯ್ದೆ 1980ರಿಂದಲೇ ಜಾರಿಯಲ್ಲಿದೆ. ಹೀಗಾಗಿ ಅರಣ್ಯ ಪ್ರದೇಶದ ಹತ್ತಿರದಲ್ಲಿರುವ ಹಳ್ಳಿಗಳ ಅಭಿವೃದ್ಧಿಗೆ ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯಲ್ಲಿ ಬಹಳ ಕಠಿಣ ನಿಯಮ ಇದೆ. ನಾನು ಸಿಎಂ ಆಗಿದ್ದಾಗ ಫಾರೆಸ್ಟ್ ಸೆಟಲ್&zwnj;ಮೆಂಟ್ ಆಕ್ಟನ್ನು ಸರಳಿಕರಣ ಮಾಡಲು ನಾವು ಪಯತ್ನ ಮಾಡಿದ್ದೇವು. ಸುಮಾರು 6 ಲಕ್ಷ ಡೀಮ್ಡ್ ಫಾರೆಸ್ಟ್ ಅನ್ನು ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇವು. ಅದನ್ನು ಮುಂದೆ ಬಂದ ಸರ್ಕಾರಗಳು ಪಾಲನೆ ಮಾಡಲಿಲ್ಲ ಎಂದರು.&lt;/p&gt;&lt;p&gt;ಸವಣೂರಿನಲ್ಲಿ ಹಾದು ಹೋಗುವ ಲಕ್ಷ್ಮೇಶ್ವರ ರಸ್ತೆಯನ್ನು ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಪಯತ್ನ ಮಾಡುತ್ತೇವೆ. ನಾವೆಲ್ಲರೂ ಸೇರಿ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ. ನಾವು ಮುಕ್ತ ಮನಸ್ಸಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/deemed-forest-revenue-land-benefit-farmers-basavaraj-bommai-gvd/articleshow-guz09hu"/>
        </item>
        <item>
            <title><![CDATA[ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ, ದೇವರ ದರ್ಶನ ಪಡೆದ ನವಜೋಡಿ ಮನೆ ಸೇರಲೇ ಇಲ್ಲ!]]></title>
            <link>https://kannada.asianetnews.com/karnataka-districts/tragic-nh-48-crash-in-haveri-newly-married-couple-dies-after-car-hits-parked-truck-gdp/articleshow-gxz1fye</link>
            <guid isPermaLink="true">https://kannada.asianetnews.com/karnataka-districts/tragic-nh-48-crash-in-haveri-newly-married-couple-dies-after-car-hits-parked-truck-gdp/articleshow-gxz1fye</guid>
            <pubDate>Sun, 01 Mar 2026 15:50:16 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು, ಇತ್ತೀಚೆಗೆ ವಿವಾಹವಾದ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjmeffv2f3ed3v5g88abjby7,imgname-haveri-road-accident-1772360286050.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗಷ್ಟೇ ಮದುವೆಯಾದ ನವ ದಂಪತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದ್ದು, ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ನುಜ್ಜುಗುಜ್ಜಾಗಿದೆ.&lt;/p&gt;&lt;h2&gt;ನಿಂತಿದ್ದ ಲಾರಿಗೆ ಕಾರು ಡಿಕ್ಕಿ&lt;/h2&gt;&lt;p&gt;ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34 ವರ್ಷ) ಮತ್ತು ಅವರ ಪತ್ನಿ ಐಶ್ವರ್ಯ (30 ವರ್ಷ) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ಕಡೆಯಿಂದ ಶಿಗ್ಗಾಂವಿ ಕಡೆಗೆ KA-63 M-0522 ವ್ಯಾಗನಾರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾಗನಾರ್ ಕಾರು ಹಿಂಬದಿಯಿಂದ ಭಾರೀ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಇಷ್ಟೊಂದು ಜಾಸ್ತಿಯಾಗಿದ್ದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರ್ತಿಕ್ ಹಾಗೂ ಐಶ್ವರ್ಯ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;&lt;p&gt;ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆ ಹುಬ್ಬಳ್ಳಿಗೆ ರವಾನೆ ಮಾಡಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.&lt;/p&gt;&lt;h2&gt;ಮದುವೆಯಾಗಿ ಕೇವಲ 15 ದಿನಗಳು&lt;/h2&gt;&lt;p&gt;ಮೃತ ದಂಪತಿ ಫೆಬ್ರವರಿ 13, 2025ರಂದು ವಿವಾಹವಾಗಿದ್ದು, ಮದುವೆಯಾಗಿ ಕೇವಲ 15 ದಿನಗಳಷ್ಟೇ ಕಳೆದಿದ್ದವು. ನವ ದಾಂಪತ್ಯ ಜೀವನದ ಆರಂಭದಲ್ಲೇ ದೇವರ ದರ್ಶನಕ್ಕಾಗಿ ನವಲಗುಂದದ ಕಾಮಣ್ಣನಿಗೆ ಪೂಜೆ ಸಲ್ಲಿಸಲು ತೆರಳಿದ್ದ ದಂಪತಿ, ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮದುವೆಯ ಖುಷಿಯಲ್ಲಿ ದೇವರ ಆಶೀರ್ವಾದ ಪಡೆಯಲು ಹೊರಟ ದಂಪತಿ ಹೀಗೆ ಅಕಾಲಿಕ ಮರಣವನ್ನಪ್ಪಿರುವುದು ಕುಟುಂಬಸ್ಥರು, ಸಂಬಂಧಿಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.&lt;/p&gt;&lt;h2&gt;ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ&lt;/h2&gt;&lt;p&gt;ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಬಹಳ ಪ್ರಯತ್ನದ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.&lt;/p&gt;&lt;h2&gt;ಪೊಲೀಸ್ ತನಿಖೆ ಆರಂಭ&lt;/h2&gt;&lt;p&gt;ಘಟನಾ ಸ್ಥಳಕ್ಕೆ ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ಆರಂಭಿಸಲಾಗಿದ್ದು, ಈ ಸಂಬಂಧ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/tragic-nh-48-crash-in-haveri-newly-married-couple-dies-after-car-hits-parked-truck-gdp/articleshow-gxz1fye"/>
        </item>
        <item>
            <title><![CDATA[ಒಳ ಮೀಸಲಾತಿ ಜಾರಿ ಆಗದಿದ್ದರೆ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ]]></title>
            <link>https://kannada.asianetnews.com/politics/basavaraj-bommai-slams-siddaramaiah-budget-karnataka-gvd/articleshow-hotsggw</link>
            <guid isPermaLink="true">https://kannada.asianetnews.com/politics/basavaraj-bommai-slams-siddaramaiah-budget-karnataka-gvd/articleshow-hotsggw</guid>
            <pubDate>Sat, 07 Mar 2026 21:01:42 +0530</pubDate>
            <description><![CDATA[&lt;p&gt;ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ. ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01h09h6p8d77a57yjcyxg0k1ff,imgname-Who-is-Basavaraj-Bommai-1683947215117.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.07): &lt;/strong&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದೆ. ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ. ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;&lt;p&gt;ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್, 1.32 ಲಕ್ಷ ಕೋಟಿ ರು. ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರು. ಹೊಸ ತೆರಿಗೆ ಹಾಕಿ, 22 ಸಾವಿರ ಕೋಟಿ ರು. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು 10ರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ. 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.&lt;/p&gt;&lt;p&gt;ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರು. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರು. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.&lt;/p&gt;&lt;h2&gt;&lt;strong&gt;ಒಳ ಮೀಸಲಾತಿಗಾಗಿ ಹೋರಾಟ&lt;/strong&gt;&lt;/h2&gt;&lt;p&gt;ಒಳ ಮೀಸಲಾತಿ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ, ಹೀಗಾಗಿ ದಲಿತ ಸಮಾಜಕ್ಕೆ ಅನ್ಯಾಯ ನಡೆಯುತ್ತಿದೆ. ಒಳ ಮೀಸಲಾತಿ ಕಾನೂನು ಮಾಡಿರುವುದೇ ಸರ್ಕಾರ. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು ಶೇ.17 ಪರ್ಸೆಂಟ್ ಮಾಡಿ ಈಗ ಅದನ್ನು ಕೊಡುವುದಿಲ್ಲ ಅಂದರೆ ಹೇಗೆ? ಈ ಬಗ್ಗೆ ಅಡ್ವೊಕೇಟ್ ಜನರಲ್ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಕೋರ್ಟ್ ಯಾವುದೇ ಡೈರೆಕ್ಷನ್ ಕೊಟ್ಟಿಲ್ಲ, ಆ ಕುಂಟು ನೆಪದಲ್ಲಿ ದಲಿತ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ದಲಿತ ಸಮಾಜ ಉಗ್ರವಾಗಿ ವಿರೋಧ ಮಾಡುತ್ತಿದೆ. ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಬಿಜೆಪಿ ಕೂಡ ತೀವ್ರ ಹೋರಾಟ ಮಾಡಲಿದೆ ಎಂದು ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/basavaraj-bommai-slams-siddaramaiah-budget-karnataka-gvd/articleshow-hotsggw"/>
        </item>
        <item>
            <title><![CDATA[ಮಾನವನ ವ್ಯಾಮೋಹದಿಂದ ಯುದ್ಧ: ಭಾರತದಲ್ಲಿ ಶಾಂತಿ ನೆಲೆಸಲು ಕಾರಣ ಇಲ್ಲಿ ಧರ್ಮ ಇದೆ, ನಮ್ಮಂತಹ ಗುರುಗಳಿದ್ದೇವೆ -ಸಾಣೇಹಳ್ಳಿ ಶ್ರೀಗಳು]]></title>
            <link>https://kannada.asianetnews.com/karnataka-districts/chalageri-kailasa-mandira-inauguration-spiritual-discourse-on-peace-and-war-rav/articleshow-i0ew0yr</link>
            <guid isPermaLink="true">https://kannada.asianetnews.com/karnataka-districts/chalageri-kailasa-mandira-inauguration-spiritual-discourse-on-peace-and-war-rav/articleshow-i0ew0yr</guid>
            <pubDate>Wed, 18 Mar 2026 07:31:59 +0530</pubDate>
            <description><![CDATA[&lt;p&gt;ರಾಣಿಬೆನ್ನೂರಿನ ಚಳಗೇರಿಯಲ್ಲಿ ಲಿಂ.ಡಾ. ಮಹಾಂತೇಶ್ವರ ಸ್ವಾಮಿಗಳ ನೂತನ ಕೈಲಾಸ ಮಂದಿರ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಮಾನವನ ವ್ಯಾಮೋಹವೇ ಯುದ್ಧಗಳಿಗೆ ಮೂಲ ಕಾರಣವಾಗಿದ್ದು, ಭಾರತದಲ್ಲಿ ಧರ್ಮ ಗುರುಗಳ ಮಾರ್ಗದರ್ಶನದಿಂದ ಶಾಂತಿ ನೆಲೆಸಿದೆ ಎಂದು ತಿಳಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkzar7pf5bq4thn76n18y48v,imgname-1-1773799218895.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕುಮಾರಪಟ್ಟಣ: &lt;/strong&gt;ವ್ಯಾಮೋಹ ಬಂತೆಂದರೆ ಮನುಷ್ಯ ತುಂಬಾ ಸ್ವಾರ್ಥಿಯಾಗುತ್ತಾನೆ. ಸಮಾಜದಲ್ಲಿ ಕಂಠಕನಾಗುತ್ತಾನೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಪತ್ರಿಕೆ ಹಾಗೂ ಟಿವಿಗಳಲ್ಲಿ ತಾವು ನೋಡ್ತಾ ಇರಬಹುದು. ಅಮೆರಿಕ, ಇಸ್ರೆಲ್, ಪಾಕಿಸ್ತಾನ, ಇರಾನ್ ದೇಶಗಳಲ್ಲಿ ಇಂದು ಯುದ್ಧ ನಡೆಯುತ್ತಿದೆ. ಇದಕ್ಕೆ ಮಾನವನ ವ್ಯಾಮೋಹವೆ ಮೂಲ ಕಾರಣ ಎಂದು ಸಾಣೆಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಪಟ್ಟಾಧ್ಯಕ್ಷರಾದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.&lt;/p&gt;&lt;p&gt;ರಾಣಿಬೆನ್ನೂರು ತಾಲೂಕು ಚಳಗೇರಿಯ ಲಿಂ.ಡಾ. ಮಹಾಂತೇಶ್ವರ ಸ್ವಾಮಿಗಳ ಶ್ರೀಮಠದಲ್ಲಿ ಮಂಗಳವಾರ ನಡೆದ ಗುರುಗಳ ನೂತನ ಕೈಲಾಸ ಮಂದಿರ ಉದ್ಘಾಟನೆ. ಪೂಜ್ಯರ ಅಮೃತ ಶಿಲಾಮೂರ್ತಿ, ಪಂಚಲೋಹ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕೈಲಾಸ ಮಂದಿರದ ಕಳಸಾರೋಹಣ, ನಾಗದೇವತಾ ಮೂರ್ತಿಗಳಿಗೆ ಪೂಜಾ ಅಭಿಷೇಕ ಮತ್ತು ಧಾರ್ಮಿಕ ವಿಧಿ ವಿಧಾನಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಅವರು ಆಶೀರ್ವಚನ ನೀಡಿದರು.&lt;/p&gt;&lt;p&gt;ಆ ದೇಶಗಳಿಗೆ ಹೋಲಿಸಿದರೆ ನಮ್ಮ ಭಾರತದಲ್ಲಿ ಯಾಕೆ ಶಾಂತಿ ಇದೆ ಎಂದರೆ ಇಲ್ಲಿ ಧರ್ಮ ಇದೆ. ನಮ್ಮಂತ ಗುರುಗಳು, ಪೀಠಗಳು ಇವೆ. ತಪ್ಪು ಮಾರ್ಗದಲ್ಲಿ ನಡೆದರೆ ನಾವು ಬುದ್ಧಿ ಹೇಳುತ್ತೇವೆ.&lt;/p&gt;&lt;p&gt;ನಿಮ್ಮಂತ ಭಕ್ತರ ಬೆಂಬಲವೂ ಸ್ವಾಮಿಗಳಿಗೆ ಸದಾ ಇದೆ. ಸಮಾಜದಲ್ಲಿ ಒಳ್ಳೆಯದನ್ನೇ ಮಾಡಬೇಕು ಹೊರತು ಮಠವನ್ನು ದೊಡ್ಡದನ್ನಾಗಿ ಮಾಡಬೇಕೆಂದು ಭಾವಿಸಬೇಡಿ. ಬದಲಾಗಿ ಕಾಯಕವೇ ಕೈಲಾಸ ಎಂಬ ತತ್ವವನ್ನು ನಂಬಿಕೊಂಡು, ಭಿಕ್ಷಾಟನೆಯ ದಾರಿ ಹಿಡಿಯದೆ, ತಾವು ದುಡಿದಂತ ಒಂದು ದಿವ್ಯಚೇತನದಲ್ಲಿ ನೀವು ಹೋಗಬೇಕು ಎಂದರು.&lt;/p&gt;&lt;p&gt;ಸಾನಿಧ್ಯವಹಿಸಿದ್ದ ಚನ್ನಗಿರಿ ತಾಲೂಕು ವಡ್ನಾಳು ವಿಶ್ವಕರ್ಮ ಮಹಾ ಸಂಸ್ಥಾನ ಸಾವಿತ್ರಿ ಪೀಠದ ಶಂಕರಾತ್ಮಾನಂದ ಸರಸ್ವತಿ ಮಹಾಸ್ವಾಮಿಗಳು ಮಾತನಾಡಿ, &quot;ತುಂಬಿದ ಕೂಡ ಎಂದೆಂದೂ ತುಳುಕುವುದಿಲ್ಲ. ಖಾಲಿ ಕೊಡವು ಸಹ ತುಳುಕುವುದಿಲ್ಲ&rdquo; ಅದೇ ರೀತಿ ತುಂಬಿದ ಸಭೆಯಲ್ಲಿಯೂ ಗದ್ದಲವಿಲ್ಲವೆಂದರೆ, ಮಹಾಂತೇಶ್ವರ ಸ್ವಾಮಿಗಳು ತುಂಬಿದಕೊಡವಿದ್ದಂತೆ. ಏಕೆಂದರೆ ತುಂಬಾ ಸರಳವಾದ ಜೀವನ ಅವರದು. ಜೀವನದಲ್ಲಿ ಏನೂ ಅಪೇಕ್ಷೆ ಪಡದೆ, ಸಾವಿರಾರು ಜನ ಭಕ್ತರ ಆರಾಧ್ಯ ದೈವ ಎಂದರೆ ತಪ್ಪಾಗಲಾರದು. ಸ್ವಾಮಿಗಳು ದೇಹದಿಂದ ದೂರವಾದರೂ ಸಹ ನಿಮ್ಮೂರಿನ ಸುತ್ತಲೂ ನಿಮ್ಮೆಲ್ಲರ ಹೃದಯದಲ್ಲಿ ಅಡಗಿದ್ದಾರೆ. ಸ್ವಾಮಿಗಳ ನಿಷ್ಠೆ, ಸರಳ ಜೀವನ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಿರಿ ಎಂದು ತಿಳಿ ಹೇಳಿದರು.&lt;/p&gt;&lt;p&gt;ಗೋಕಾಕ್&zwnj; ತಾಲೂಕು ಘೋಡಗೇರಿಯ ಶಿವಾನಂದ ಮಠದ ಮಲ್ಲಯ್ಯ ಸ್ವಾಮಿಗಳ ಕೈಲಾಸ ಮಂದಿರ ಉದ್ಘಾಟಿಸಿದರು. ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳಿಂದ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಿತು, ಐರಣಿ ಹೊಳೆಮಠದ ಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಕೈಲಾಸ ಮಂದಿರದ ಗೋಪುರದ ಕಳಸಾರೋಹಣ ಕಾರ್ಯಕ್ರಮ ಜರುಗಿತು.&lt;/p&gt;&lt;p&gt;ಖಂಡೇರಾಯನಹಳ್ಳಿಯ ಆರೂಢ ತಪೋಭೂಮಿಯ ಗುರು ನಾಗರಾಜನಂದ ಮಹಾಸ್ವಾಮಿಗಳು, ರಾಣಿಬೆನ್ನೂರಿನ ವಿರಕ್ತಮಠದ ಗುರು ಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಾ. ಮಹಾಂತೇಶ್ವರ ಮಹಾಸ್ವಾಮಿಗಳ ನೂತನ ಮೂರ್ತಿ ಅನಾವರಣ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನುರಾಮದುರ್ಗದ ಅವರಾದಿ ಫಲಹಾರೇಶ್ವರ ಸಂಸ್ಥಾನ ಮಠದ ಶಿವಮೂರ್ತಿ ಮಹಾಸ್ವಾಮಿಗಳು ವಹಿಸಿದ್ದರು.&lt;/p&gt;&lt;p&gt;ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ಹಾವೇರಿ ಜಿಲ್ಲಾ ಜೆಡಿಎಸ್&zwnj; ಅಧ್ಯಕ್ಷರಾದ ಮಂಜುನಾಥ ಗೌಡಶಿವಣ್ಣನವರ, ರಾಣಿಬೆನ್ನೂರು ತಾಲೂಕು ತಹಸಿಲ್ದಾರ್ ಭಗವಾನ್, ಚಳಗೇರಿ ಗ್ರಾಮ ಲೆಕ್ಕಾಧಿಕಾರಿ ಎ.ಸಿ. ರುದ್ರೇಶ್, ಮುಖಂಡರುಗಳಾದ ಸಣ್ಣತಮ್ಮಪ್ಪ ಬಾಕಿ, ಜಟ್ಟೆಪ್ಪಕರೇಗೌಡರ್, ಮೌಲಾಸಾಬ್ ಫ್ಲಾಟ್, ರಾಯಪ್ಪ ತೆಂಬದ ಆಗಮಿಸಿದ್ದರು. ನೇತ್ರಾವತಿ ಯತ್ತಿನಮನಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಹನುಮಂತಪ್ಪ ಕನ್ನಮ್ಮನವರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಸೋಮನಗೌಡರ್&zwnj; ಕಾರ್ಯಕ್ರಮ ನಿರೂಪಿಸಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/chalageri-kailasa-mandira-inauguration-spiritual-discourse-on-peace-and-war-rav/articleshow-i0ew0yr"/>
        </item>
        <item>
            <title><![CDATA[ಹಾವೇರಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆ ನುಗ್ಗಿದ ಬಸ್; ನಾಲ್ವರಿಗೆ ಗಾಯ, 2 ವರ್ಷದ ಮಗು ಸಾವು!]]></title>
            <link>https://kannada.asianetnews.com/karnataka-districts/haveri-bus-stand-accident-bus-plows-into-crowd-two-year-old-child-dead-sat/articleshow-igl2aty</link>
            <guid isPermaLink="true">https://kannada.asianetnews.com/karnataka-districts/haveri-bus-stand-accident-bus-plows-into-crowd-two-year-old-child-dead-sat/articleshow-igl2aty</guid>
            <pubDate>Wed, 01 Apr 2026 15:15:10 +0530</pubDate>
            <description><![CDATA[ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ಚಾಲಕನ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಸಾರಿಗೆ ಬಸ್ ಪ್ಲಾಟ್&zwnj;ಫಾರ್ಮ್&zwnj;ಗೆ ನುಗ್ಗಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಎರಡು ವರ್ಷದ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn46tsz7qwambzgvh28cxwq3,imgname-haveri-bus-stand-1775036622823.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಏ.01): ಹಾ&lt;/strong&gt;ವೇರಿ ನಗರದ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ರಾಜ್ಯ ಸಾರಿಗೆ ಬಸ್ ಪ್ಲಾಟ್&zwnj;ಫಾರ್ಮ್ ಮೇಲೆ ಕಾಯುತ್ತಿದ್ದ ಜನರ ಮೇಲೆ ಏಕಾಏಕಿ ನುಗ್ಗಿದೆ. ಈ ಘೋರ ಅಪಘಾತದಲ್ಲಿ ತೀವ್ರವಾಗಿ ನಾಲ್ವರು ಗಾಯಗೊಂಡಿದ್ದರು. ಈ ಪೈಕಿ ಎರಡು ವರ್ಷದ ಪುಟ್ಟ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಹಾವೇರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಪ್ರಯಾಣಿಕರ ಓಡಾಟವಿತ್ತು. ಸವಣೂರು ಪ್ಲಾಟ್&zwnj;ಫಾರ್ಮ್ ಬಳಿ ಪ್ರಯಾಣಿಕರು ತಾವು ಹೋಗಬೇಕಾದ ಬಸ್&zwnj;ಗಳಿಗಾಗಿ ಕಾಯುತ್ತಿದ್ದರು. ಈ ವೇಳೆ ಸವಣೂರು ಕಡೆಗೆ ತೆರಳಬೇಕಿದ್ದ ಬಸ್ ನಿಲ್ದಾಣಕ್ಕೆ ಬಂದಿದೆ. ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಬಸ್&zwnj;ನ ಮುಂಭಾಗದಲ್ಲಿದ್ದ ಬೋರ್ಡ್ ನೋಡಲು ಮುಂದಕ್ಕೆ ಬಂದಿದ್ದಾರೆ. ಈ ವೇಳೆ ಚಾಲಕ ಬಸ್ಸನ್ನು ನಿಯಂತ್ರಿಸಲಾಗದೆ, ಅತಿಯಾದ ವೇಗದಿಂದ ಪ್ಲಾಟ್&zwnj;ಫಾರ್ಮ್ ಮೇಲಿದ್ದ ಜನರ ಮೇಲೆಯೇ ನುಗ್ಗಿಸಿದ್ದಾನೆ.&lt;/p&gt;&lt;h2&gt;&lt;strong&gt;ಬಾರದ ಲೋಕಕ್ಕೆ ತೆರಳಿದ 2 ವರ್ಷದ ಕಂದ:&lt;/strong&gt;&lt;/h2&gt;&lt;p&gt;ಬಸ್ ನುಗ್ಗಿದ ರಭಸಕ್ಕೆ ಸವಣೂರು ಪಟ್ಟಣದ ನಿವಾಸಿಗಳಾದ ಪೋಷಕರ ಜೊತೆಗಿದ್ದ ಎರಡು ವರ್ಷದ ಪುಟ್ಟ ಕಂದ ಹಜರತ್ ಅಲಿ ತೀವ್ರವಾಗಿ ಗಾಯಗೊಂಡಿದ್ದನು. ಮಗುವಿನ ಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಹಜರತ್ ಅಲಿ ಸಾವನ್ನಪ್ಪಿದ್ದಾನೆ. ಕಣ್ಣೆದುರೇ ಆಟವಾಡಿಕೊಂಡಿದ್ದ ಕಂದಮ್ಮ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟಿರುವುದನ್ನು ಕಂಡು ತಂದೆ-ತಾಯಿ ಮತ್ತು ಸಂಬಂಧಿಕರ ಗೋಳು ನೋಡಲಾರದಂತಿತ್ತು.&lt;/p&gt;&lt;h2&gt;&lt;strong&gt;ಮೂವರಿಗೆ ಗಂಭೀರ ಗಾಯ:&lt;/strong&gt;&lt;/h2&gt;&lt;p&gt;ಈ ಅಪಘಾತದಲ್ಲಿ ಕೇವಲ ಮಗು ಮಾತ್ರವಲ್ಲದೆ, ಬಂಕಾಪುರ ಪಟ್ಟಣದ ನಿವಾಸಿಗಳಾದ ವಾಸುದೇವ (44), ಹರ್ಷಾ (6) ಹಾಗೂ ಕಾವ್ಯಾಂಜಲಿ (39) ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಇವರೆಲ್ಲರೂ ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ಚಾಲಕನ ಬೇಜವಾಬ್ದಾರಿತನವೇ ಈ ಅನಾಹುತಕ್ಕೆ ನೇರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;h3&gt;&lt;strong&gt;ಸಿಸಿಟಿವಿ ದೃಶ್ಯಾವಳಿ ಲಭ್ಯ:&lt;/strong&gt;&lt;/h3&gt;&lt;p&gt;ಬಸ್ ಜನರ ಮೇಲೆ ನುಗ್ಗಿದ ಭೀಕರ ದೃಶ್ಯವು ಏಷ್ಯಾನೆಟ್ ಸುವರ್ಣ ನ್ಯೂಸ್&zwnj;ಗೆ ಲಭ್ಯವಾಗಿದ್ದು, ಅಪಘಾತದ ತೀವ್ರತೆಯನ್ನು ಸಾರಿ ಹೇಳುತ್ತಿದೆ. ಪ್ಲಾಟ್&zwnj;ಫಾರ್ಮ್ ಮೇಲಿರುವ ಜನರ ಮೇಲೆ ಬಸ್ ಹೇಗೆ ನುಗ್ಗಿತು ಎಂಬುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಚಾಲಕರು ಇಷ್ಟು ಅಜಾಗರೂಕತೆಯಿಂದ ವಾಹನ ಚಲಾಯಿಸುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/haveri-bus-stand-accident-bus-plows-into-crowd-two-year-old-child-dead-sat/articleshow-igl2aty"/>
        </item>
        <item>
            <title><![CDATA[ರೈತ, ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು: ಸಂಸದ ಬಸವರಾಜ ಬೊಮ್ಮಾಯಿ]]></title>
            <link>https://kannada.asianetnews.com/politics/basavaraj-bommai-speech-haveri-farmers-workers-economy-gvd/articleshow-kg62553</link>
            <guid isPermaLink="true">https://kannada.asianetnews.com/politics/basavaraj-bommai-speech-haveri-farmers-workers-economy-gvd/articleshow-kg62553</guid>
            <pubDate>Sat, 07 Mar 2026 23:05:17 +0530</pubDate>
            <description><![CDATA[&lt;p&gt;ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jm7p0pc71btv3jp590krtgmj,imgname-basavaraj-bommai--1-.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.07): &lt;/strong&gt;ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.&lt;/p&gt;&lt;p&gt;&lt;strong&gt;60 ಕೋಟಿ ಜನಧನ್ ಖಾತೆ:&lt;/strong&gt; ದುಡಿಯುವ ವರ್ಗಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಜನರ ಬಳಿ ಹಣ ಬರಬೇಕು ಎಂಬ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ 60 ಕೋಟಿ ಜನಧನ್ ಖಾತೆಗಳಿದ್ದು, ಈ ಪೈಕಿ ಮಹಿಳೆಯರ ಖಾತೆಗಳು ಹೆಚ್ಚಾಗಿವೆ. ಜನಧನ ಖಾತೆಯಿಂದ ಮಹಿಳೆಯರು 7ಉಳಿತಾಯ ಮಾಡುತ್ತಿದ್ದಾರೆ. ಡಿಜಿಟಲ್ ಹಣಕಾಸು ವ್ಯವಹಾರದಿಂದ ಬೆಳೆವಿಮೆ, ಪಿಂಚಣಿ, ಬೆಳೆ ಪರಿಹಾರದ ಹಣ ನೇರವಾಗಿ ಫಲಾನುಭವಿ ಖಾತೆಗೆ ಜಮೆಯಾಗುತ್ತದೆ. ಇದರಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ ಎಂದರು.&lt;/p&gt;&lt;p&gt;ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಮಯದಲ್ಲಿ ದೇಶದ ಜನಸಂಖ್ಯೆ 33 ಕೋಟಿ ಇತ್ತು, ಆದರೂ ಆಹಾರದ ಕೊರತೆ ಇದ್ದು, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇಂದು ದೇಶದ ಜನಸಂಖ್ಯೆ 133 ಕೋಟಿಗೂ ಅಧಿಕ ಇದ್ದರೂ ಸಹ ಆಹಾರದ ಕೊರತೆ ಇಲ್ಲ. ಇದಕ್ಕೆ ಕಾರಣ ರೈತರು ಹಾಗೂ ದುಡಿಯುವ ವರ್ಗವಾಗಿದೆ ಎಂದರು. 1.50 ಲಕ್ಷ ಕೋಟಿ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ 1.50 ಲಕ್ಷ ಕೋಟಿ ರು. ಮೊತ್ತದ ತೆರಿಗೆ ವಿನಾಯಿತಿ ನೀಡಿದೆ. ಇದರಿಂದ ಜನರ ಆರ್ಥಿಕ ವ್ಯವಸ್ಥೆ ಸುಧಾರಿಸಿದೆ ಹಾಗೂ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.&lt;/p&gt;&lt;h2&gt;&lt;strong&gt;ಜಿಲ್ಲೆಗೆ ಡಿಸಿಸಿ ಬ್ಯಾಂಕ್&lt;/strong&gt;&lt;/h2&gt;&lt;p&gt;ನಬಾರ್ಡ್ ಯೋಜನೆ ಮೊತ್ತ ಡಿಸಿಸಿ ಬ್ಯಾಂಕ್&zwnj;ಗೆ ಬರುತ್ತಿದ್ದು, ಧಾರವಾಡ ಡಿಸಿಸಿ ಬ್ಯಾಂಕ್&zwnj;ನಿಂದ ಜಿಲ್ಲೆಗೆ ಮೊತ್ತ ನೀಡಲಾಗುತ್ತಿತ್ತು. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸು ಈಗ ನನಸಾಗಿದೆ. ಕೇಂದ್ರ ಸಚಿವ ಅಮಿತ ಶಾ ಅವರ ದೂರದೃಷ್ಟಿಕೋನದಿಂದ ಜಿಲ್ಲೆಗೊಂದು ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದ್ದಾರೆ. ಈಗಾಗಲೇ ಆರ್&zwnj;ಬಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.&lt;/p&gt;&lt;p&gt;ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ದೇಶದ ಆರ್ಥಿಕ ಸದೃಢತೆಗೆ ಬ್ಯಾಂಕ್&zwnj;ಗಳ ಪಾತ್ರ ಪ್ರಮುಖವಾಗಿದೆ. ಜನರಿಗೆ ಸಾಲ ಸಿಕ್ಕರೆ ಅವರ ಆರ್ಥಿಕ ಚಟುವಟಿಕೆ ಸುಧಾರಣೆಗೆ ಸಹಾಯವಾಗುತ್ತದೆ. ಹಾಗಾಗಿ ಗ್ರಾಹಕರು ಬ್ಯಾಂಕಿಗೆ ಸಾಲ ಕೇಳಲು ಬಂದಾಗ ಅವರ ಸಮಸ್ಯೆ ಆಲಿಸಬೇಕು, ಹೆಚ್ಚಿನ ಕಾರ್ಯಕ್ಷಮತೆ ತೋರಿಸಬೇಕು ಹಾಗೂ ಧನಾತ್ಮಕವಾಗಿ ಆಲೋಚನೆ ಮಾಡಬೇಕು. ಕೈಗಾರಿಕೆಗೆ ಸಾಲ ನೀಡುವ ಪ್ರಮಾಣ ದ್ವಿಗುಣವಾಗಿದೆ, ಆದರೆ ಕೃಷಿ ಕ್ಷೇತ್ರಕ್ಕೆ ಕಡಿಮೆ ಪ್ರಮಾಣದಲ್ಲಿದೆ. ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ ಸಾಲ ನೀಡುವ ಪ್ರಮಾಣ ಹೆಚ್ಚಾಗಬೇಕು ಎಂದು ಹೇಳಿದರು.&lt;/p&gt;&lt;p&gt;ಜಿಪಂ ಸಿಇಒ ರುಚಿ ಬಿಂದಲ್, ಬ್ಯಾಂಕ್ ಆಫ್ ಬರೋಡಾ ಶಿವಮೊಗ್ಗ ವಲಯದ ಪ್ರಾದೇಶಿಕ ಉಪ ವ್ಯವಸ್ಥಾಪಕ ದೀಪಕ ಶಹಕರ, ಮಂಗಳೂರು ವಲಯದ ಉಪ ವ್ಯವಸ್ಥಾಪಕ ರಾಜೇಶ ಶರ್ಮಾ, ಶಿವಮೊಗ್ಗ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಪಂಕಜಕುಮಾರ ಸಮನ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾವೇರಿಯ ಪ್ರಾದೇಶಿಕ ವ್ಯವಸ್ಥಾಪಕ ನವೀನ ಬಿ, ನಬಾರ್ಡನ ಡಿ.ಡಿ.ಎಂ ರಂಗನಾಥ ಎಸ್., ಇತರರು ಇದ್ದರು. ಲೀಡ್ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಪ್ರಭುದೇವ ಸ್ವಾಗತಿಸಿದರು.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/basavaraj-bommai-speech-haveri-farmers-workers-economy-gvd/articleshow-kg62553"/>
        </item>
        <item>
            <title><![CDATA[ಹಾವೇರಿ: ಪರೀಕ್ಷೆಗೆ ಹೆದರಿ ಮೊರಾರ್ಜಿ ವಸತಿ ಶಾಲೆಯ 5 ವಿದ್ಯಾರ್ಥಿಗಳು  ಕಾಂಪೌಂಡ್‌ ಜಿಗಿದು ರಾತ್ರೋ ರಾತ್ರಿ ನಾಪತ್ತೆ]]></title>
            <link>https://kannada.asianetnews.com/education/five-sslc-students-go-missing-due-to-exam-fear-in-haveri-panic-at-minority-morarji-residential-school/articleshow-kur9ilo</link>
            <guid isPermaLink="true">https://kannada.asianetnews.com/education/five-sslc-students-go-missing-due-to-exam-fear-in-haveri-panic-at-minority-morarji-residential-school/articleshow-kur9ilo</guid>
            <pubDate>Fri, 27 Feb 2026 15:18:29 +0530</pubDate>
            <description><![CDATA[&lt;p&gt;ಹಾವೇರಿಯ ಮೊರಾರ್ಜಿ ವಸತಿ ಶಾಲೆಯಿಂದ ಐವರು ಎಸ್&zwnj;ಎಸ್&zwnj;ಎಲ್&zwnj;ಸಿ ವಿದ್ಯಾರ್ಥಿಗಳು ಏಕಾಏಕಿ ನಾಪತ್ತೆಯಾಗಿದ್ದಾರೆ. ಪರೀಕ್ಷೆಯ ಭಯದಿಂದ ವಿದ್ಯಾರ್ಥಿಗಳು ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿರಬಹುದೆಂದು ಶಂಕಿಸಲಾಗಿದ್ದು, ಅಧಿಕಾರಿಗಳ ಗೊಂದಲಕಾರಿ ಹೇಳಿಕೆಗಳಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jpv8hq9rcm14930byd7b3870,imgname-1.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ&lt;/strong&gt;: ಪರೀಕ್ಷೆಗಳ ಭಯದಿಂದಾಗಿ ಏಕಾಏಕಿ ಐವರು ಎಸ್&zwnj;ಎಸ್&zwnj;ಎಲ್&zwnj;ಸಿ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್&ndash;ಬಿದರಿ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ವೇಳೆ, ಇಂದು ಬೆಳಗಿನ ಜಾವ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.&lt;/p&gt;&lt;h2&gt;ಪರೀಕ್ಷೆಗಳ ಒತ್ತಡವೇ ನಾಪತ್ತೆಗೆ ಕಾರಣ?&lt;/h2&gt;&lt;p&gt;ನಾಪತ್ತೆಯಾಗಿರುವ ಐವರು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಭಯ ಕಾಡುತ್ತಿತ್ತು ಎಂದು ಹೇಳಲಾಗುತ್ತಿದೆ. ಎಸ್&zwnj;ಎಸ್&zwnj;ಎಲ್&zwnj;ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿದ್ದ ಹಿನ್ನೆಲೆ, ಮಕ್ಕಳ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿದ್ದು, ಅದೇ ಕಾರಣಕ್ಕೆ ಅವರು ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.&lt;/p&gt;&lt;h2&gt;ವಸತಿ ಶಾಲೆಯಲ್ಲಿನ ಭದ್ರತಾ ಕೊರತೆ&lt;/h2&gt;&lt;p&gt;ಘಟನೆ ನಡೆದ ರಾತ್ರಿ ವಸತಿ ಶಾಲೆಯಲ್ಲಿ ವಾಚ್&zwnj;ಮ್ಯಾನ್ ಹಾಜರಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಳಗಿನ ನಸುಕಿನ ಜಾವ ಮಕ್ಕಳು ಕಾಂಪೌಂಡ್ ಹಾರಿ ಹೊರಗೆ ಹೋಗಿರುವುದು ಭದ್ರತಾ ವ್ಯವಸ್ಥೆಯ ಮೇಲೆಯೇ ಪ್ರಶ್ನೆಗಳನ್ನು ಎಬ್ಬಿಸಿದೆ. ವಸತಿ ಶಾಲೆಯಲ್ಲಿನ ಮೇಲ್ವಿಚಾರಣೆ ಹಾಗೂ ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.&lt;/p&gt;&lt;h2&gt;ಪರಸ್ಪರ ವಿರೋಧಿ ಹೇಳಿಕೆಗಳು&lt;/h2&gt;&lt;p&gt;ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಸಿಗದೆ ಗೊಂದಲ ನಿರ್ಮಾಣವಾಗಿದೆ. ವಸತಿ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಅಕ್ಕುವಳ್ಳಿ ಅವರು, &ldquo;ಮಕ್ಕಳು ಸುರಕ್ಷಿತವಾಗಿದ್ದಾರೆ, ಪತ್ತೆಯಾಗಿದ್ದಾರೆ&rdquo; ಎಂದು ಹೇಳಿರುವರೆಂದು ತಿಳಿದುಬಂದಿದೆ. ಆದರೆ ಮತ್ತೊಂದೆಡೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಬ್ದುಲ್ ಮಿರ್ಜಾನವರ ಅವರು ಮಾಧ್ಯಮಗಳಿಗೆ &ldquo;ಮಕ್ಕಳು ಬೇರೆ ಕಡೆ ಇದ್ದಾರೆ&rdquo; ಎಂಬ ಅಸ್ಪಷ್ಟ ಉತ್ತರ ನೀಡಿದ್ದಾರೆ. ಇದರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಗಳ ಮಾಹಿತಿ ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆಯೇ ಎಂಬ ಅನುಮಾನವೂ ಮೂಡಿದೆ.&lt;/p&gt;&lt;h2&gt;ಮಕ್ಕಳ ಪತ್ತೆಗೆ ಶೋಧ ಕಾರ್ಯ&lt;/h2&gt;&lt;p&gt;ಪ್ರಸ್ತುತ ವಸತಿ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್ ಅಕ್ಕುವಳ್ಳಿ ಅವರು ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ. ಸ್ಥಳೀಯರು, ಶಾಲಾ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಕ್ಕಳ ಸುಳಿವು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.&lt;/p&gt;&lt;h2&gt;ಪೋಷಕರ ಆತಂಕ, ಇಲಾಖೆಯ ಮೇಲೆ ಒತ್ತಡ&lt;/h2&gt;&lt;p&gt;ಪರೀಕ್ಷೆಗಳ ಒತ್ತಡದಿಂದ ಮಕ್ಕಳು ಪರಾರಿಯಾಗಿರುವುದು ಶಿಕ್ಷಣ ವ್ಯವಸ್ಥೆಯಲ್ಲಿನ ಮಾನಸಿಕ ಒತ್ತಡದ ಗಂಭೀರತೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದೆ. ಪೋಷಕರು ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಶಾಲಾ ಆಡಳಿತ ಸ್ಪಷ್ಟ ಮಾಹಿತಿ ನೀಡಬೇಕು ಎಂಬ ಒತ್ತಾಯ ಜೋರಾಗಿದೆ. ಈ ಘಟನೆ, ವಸತಿ ಶಾಲೆಗಳಲ್ಲಿನ ಭದ್ರತೆ, ವಿದ್ಯಾರ್ಥಿಗಳ ಮಾನಸಿಕ ಆರೈಕೆ ಹಾಗೂ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತು ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಮಕ್ಕಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಸುರಕ್ಷಿತವಾಗಿ ಮನೆಗೆ ಕರೆತರುವುದೇ ಇದೀಗ ಎಲ್ಲರ ಮೊದಲ ಆದ್ಯತೆಯಾಗಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/education/five-sslc-students-go-missing-due-to-exam-fear-in-haveri-panic-at-minority-morarji-residential-school/articleshow-kur9ilo"/>
        </item>
        <item>
            <title><![CDATA[Climate Change Effect on Mango ಹವಾಮಾನ ವೈಪರೀತ್ಯದಿಂದ ಈ ವರ್ಷವೂ ಮಾವಿನ ಹಣ್ಣು ಬಲು ದುಬಾರಿ?]]></title>
            <link>https://kannada.asianetnews.com/state/karnataka-mango-prices-to-soar-climate-change-hits-yields-this-year/articleshow-kyl0byb</link>
            <guid isPermaLink="true">https://kannada.asianetnews.com/state/karnataka-mango-prices-to-soar-climate-change-hits-yields-this-year/articleshow-kyl0byb</guid>
            <pubDate>Fri, 20 Feb 2026 05:45:57 +0530</pubDate>
            <description><![CDATA[ಈ ವರ್ಷ ಕರ್ನಾಟಕದಾದ್ಯಂತ ಮಾವಿನ ಮರಗಳು ಹೂವುಗಳಿಂದ ತುಂಬಿ ತುಳುಕುತ್ತಿದ್ದು, ರೈತರಲ್ಲಿ ಆರಂಭಿಕ ಸಂತಸ ಮೂಡಿಸಿದೆ. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೂವು ಮತ್ತು ಮಿಡಿಗಳು ಉದುರುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ ಇಳುವರಿ ಕುಸಿತ ಮತ್ತು ಬೆಲೆ ಏರಿಕೆಯ ಭೀತಿ ಎದುರಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01khw626nsw8wkfsqvs3sej8x2,imgname-----------------------2026-02-20t053904.242-1771546155705.jpg" type="image/jpeg" height="390" width="690"/>
            <content:encoded><![CDATA[&lt;p&gt;&amp;nbsp;&lt;strong&gt;ಹಾವೇರಿ/ಬೆಂಗಳೂರು (ಫೆ.20) &lt;/strong&gt;ರಾಮನಗರ, ಕೋಲಾರ, ಮೈಸೂರು, ಹಾವೇರಿ ಸೇರಿ ರಾಜ್ಯದೆಲ್ಲೆಡೆ ಈ ಸಲ ಮಾವಿನ ಮರಗಳು ಮೈತುಂಬ ಹೂವು ಹೊದ್ದು ನಿಂತಿವೆ. ಇದು ರೈತರ ಮೊಗದಲ್ಲಿ ಸಂತಸ ಮೂಡಿಸಿದ್ದರೆ, ಹವಾಮಾನ ವೈಪರೀತ್ಯದಿಂದ ಹೂವು ಹಾಗೂ ಮಾವಿನ ಮಿಡಿ ವಿಪರೀತ ಪ್ರಮಾಣದಲ್ಲಿ ಉದುರುತ್ತಿರುವುದು ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಇಳುವರಿ ಕಡಿಮೆಯಾದರೆ, ಬೆಲೆ ದುಬಾರಿಯಾಗಿ, ಗ್ರಾಹಕರ ಜೇಬಿಗೆ ಹೊರೆಯಾಗುವ ಸಾಧ್ಯತೆ ಇದೆ.&lt;/p&gt;&lt;p&gt;ಹವಾಮಾನ ವೈಪರೀತ್ಯದಿಂದಾಗಿ (ಹಠಾತ್ ಮಳೆ, ಗಾಳಿ, ಬಿಸಿಲು) ರಾಮನಗರ, ಕೋಲಾರ, ಹಾವೇರಿ ಸೇರಿ ರಾಜ್ಯದ ಹಲವೆಡೆ ಮಾವಿನ ಮಿಡಿಗಳು ಹೆಚ್ಚಿನ ಪ್ರಮಾಣದಲ್ಲಿ ಉದುರುತ್ತಿವೆ. ಹೂ ಬಿಡುವ ಮತ್ತು ಕಾಯಿ ಕಚ್ಚುವ ಹಂತದಲ್ಲಿ ಉಂಟಾದ ಹವಾಮಾನ ಬದಲಾವಣೆ, ಆಲಿಕಲ್ಲು ಮಳೆಯಿಂದ ಫಸಲು ಕುಂಠಿತವಾಗಿ, ಕಾಯಿಯ ಗುಣಮಟ್ಟವೂ ಕಳಪೆಯಾಗಿದ್ದು, ಬೆಳೆಗಾರರಿಗೆ ಕೋಟಿಗಟ್ಟಲೆ ನಷ್ಟ ಉಂಟಾಗುತ್ತಿದೆ. ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಮಾವಿನ ಉತ್ಪಾದನೆ ತೀವ್ರವಾಗಿ ಕುಂಠಿತಗೊಂಡಿದೆ.&lt;/p&gt;&lt;p&gt;ಮಾವು ಬೆಳೆಗಾರರು ಪ್ರತಿವರ್ಷ ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ, ಅಧಿಕ ಖರ್ಚು ಕಡಿಮೆ ಆದಾಯದಿಂದ ಒಂದಿಲ್ಲೊಂದು ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ. ಆದರೆ, ಪ್ರಸಕ್ತ ವರ್ಷ ಮಾವಿನ ತೋಪುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂವುಗಳು ಕಂಡು ಬಂದಿದ್ದು, ಕೆಲವು ಕಡೆಗಳಲ್ಲಿ ಈಗಾಗಲೇ ಮಿಡಿಗಾಯಿ ಕಟ್ಟಿದೆ. ಜನವರಿ ಅಂತ್ಯದೊಳಗೆ ಚಳಿ ಮುಗಿದು ಬಿಸಿಲು ಬಿದ್ದರೆ ಕಾಯಿ ಕಟ್ಟುವ ಪ್ರಮಾಣ ಜಾಸ್ತಿಯಿರುತ್ತದೆ. ಆದರೆ, ಕೆಲವೆಡೆ, ಈ ಸಲ ಚಳಿ ಹೆಚ್ಚಾಗಿ ಹೂವುಗಳು ಉದುರುತ್ತಿರುವುದು, ಮಂಜು ಬೀಳುತ್ತಿರುವುದು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ.&lt;/p&gt;&lt;p&gt;ಶಿಗ್ಗಾಂವಿ, ಹಾನಗಲ್&zwnj; ಸೇರಿ ಇನ್ನು ಕೆಲವೆಡೆ ಮಾವಿನ ತೋಪುಗಳಲ್ಲಿ ಮರಗಳು ಕಾಯಿಕಟ್ಟುವ ಹಂತದಲ್ಲಿದ್ದು, ಬಿಸಿಲಿನ ತೀವ್ರತೆ ಹೆಚ್ಚಾಗಿ ಕಾಯಿಗಳು ಉದುರಿ ಬೀಳುತ್ತಿವೆ. ಮಾವು ಕೃಷಿ, ಹವಾಮಾನದೊಂದಿಗೆ ಆಡುವ ಜೂಜಾಟವಾಗಿದ್ದು, ಹೂವುಗಳು, ಕಾಯಿಗಳು ಉದುರುವುದು, ರೋಗಬಾಧೆ ನಿಯಂತ್ರಣಕ್ಕೆ ರೈತರು ಹತ್ತಾರು ಸಾವಿರ ರು.ಮೊತ್ತದ ಔಷಧಗಳನ್ನು ಸಿಂಪಡಿಸುವುದು ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ..&lt;/p&gt;&lt;p&gt;ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಮಾವಿನ ಮರಗಳಲ್ಲಿ ಹೂವುಗಳ ಪ್ರಮಾಣ ಅಧಿಕವಾಗಿದೆ. ಆದರೆ, ಜನವರಿಯಲ್ಲಿ ಚಳಿ ಹಾಗೂ ಇಬ್ಬನಿ ಹೆಚ್ಚಾಗಿದ್ದರಿಂದ ಮಾವಿನ ಮರದಲ್ಲಿದ್ದ ಹೂವುಗಳು ಉದುರುತ್ತಿರುವುದು ಕಂಡು ಬಂದಿದೆ. ರೋಗಬಾಧೆ, ಕೀಟಗಳ ನಿರ್ವಹಣೆ ಕುರಿತು ಭಿತ್ತಿಪತ್ರಗಳ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ರೋಗಬಾಧೆ ಕಾಣಿಸಿಕೊಂಡರೆ ತೋಟಗಾರಿಕಾ ಇಲಾಖೆಯ ತಜ್ಞರ ಸಲಹೆಯಂತೆ ರೈತರು ಔಷಧ ಸಿಂಪರಣೆ ಮಾಡಬೇಕು.&lt;/p&gt;&lt;p&gt;- ಎಸ್.ಎಚ್. ಬರಗಿಮಠ, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಹಾವೇರಿ.&amp;nbsp;&lt;/p&gt;&lt;p&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/karnataka-mango-prices-to-soar-climate-change-hits-yields-this-year/articleshow-kyl0byb"/>
        </item>
        <item>
            <title><![CDATA[ಬ್ಯಾಡಗಿ ಮೆಣಸಿನಕಾಯಿ ಮೇಲೆ ಯುದ್ಧದ ಕಾರ್ಮೋಡ: ರಫ್ತು ಬಂದ್, ಆತಂಕದಲ್ಲಿ ಬೆಳೆಗಾರರು]]></title>
            <link>https://kannada.asianetnews.com/gallery/state/effect-of-the-us-israel-iran-war-on-byadagi-chili-exports-banned-growers-in-fear-o6ygcpf</link>
            <guid isPermaLink="true">https://kannada.asianetnews.com/gallery/state/effect-of-the-us-israel-iran-war-on-byadagi-chili-exports-banned-growers-in-fear-o6ygcpf</guid>
            <pubDate>Mon, 09 Mar 2026 15:26:09 +0530</pubDate>
            <description><![CDATA[&lt;p&gt;ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಪರಿಣಾಮವಾಗಿ, ಗಲ್ಫ್ ರಾಷ್ಟ್ರಗಳಿಗೆ ಬ್ಯಾಡಗಿ ಮೆಣಸಿನಕಾಯಿ ರಫ್ತು ಸ್ಥಗಿತಗೊಂಡಿದೆ. &amp;nbsp;ಇದರಿಂದಾಗಿ ಮಾರುಕಟ್ಟೆಯಲ್ಲಿ ವಹಿವಾಟು ಕುಸಿಯುವ ಮತ್ತು ರೈತರು ಬೆಳೆದ ಮೆಣಸಿನಕಾಯಿ ಬೆಲೆ ಕಡಿಮೆಯಾಗುವ ಆತಂಕ ಎದುರಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk8zs85j2m8vqk7q923p6e90,imgname-byadgi-mirchi--2--1773049520306.jpg" type="image/jpeg" height="390" width="690"/>
            <content:encoded><![CDATA[&lt;p&gt;ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಪರಿಣಾಮವಾಗಿ, ಗಲ್ಫ್ ರಾಷ್ಟ್ರಗಳಿಗೆ ಬ್ಯಾಡಗಿ ಮೆಣಸಿನಕಾಯಿ ರಫ್ತು ಸ್ಥಗಿತಗೊಂಡಿದೆ. &amp;nbsp;ಇದರಿಂದಾಗಿ ಮಾರುಕಟ್ಟೆಯಲ್ಲಿ ವಹಿವಾಟು ಕುಸಿಯುವ ಮತ್ತು ರೈತರು ಬೆಳೆದ ಮೆಣಸಿನಕಾಯಿ ಬೆಲೆ ಕಡಿಮೆಯಾಗುವ ಆತಂಕ ಎದುರಾಗಿದೆ.&lt;/p&gt;&lt;img&gt;&lt;p&gt;ಹಾವೇರಿ: ಇರಾನ್ ಮೇಲೆ ಇಸ್ರೇಲ್ ಅಮೆರಿಕಾ ಯುದ್ಧದ ಕಾವು ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಪ್ತು ಆಗುತ್ತಿತ್ತು. ಆದರೆ ತನ್ನ ಮೇಲೆ ಅಮೆರಿಕಾ ಇಸ್ರೇಲ್ ದಾಳಿಯಿಂದ ಕಂಗೆಟ್ಟ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮಾಡುತ್ತಿರುವುದರಿಂದಾಗಿ ಗಲ್ಪ್&zwnj; ರಾಷ್ಟ್ರಗಳಲ್ಲಿ ಆತಂಕದ ವಾತಾವರಣವಿದ್ದು, ರಪ್ತು ಆಮದು ಎಲ್ಲವೂ ಬಂದ್ ಆಗಿದೆ.&lt;/p&gt;&lt;img&gt;&lt;p&gt;ಹೀಗಾಗಿ ಈಗ ಗಲ್ಫ್ ರಾಷ್ಟ್ರಕ್ಕೆ ಹೋಗಬೇಕಾಗಿದ್ದ ಮೆಣಸಿನಕಾಯಿ ಹಾಗೆಯೇ ಮಾರುಕಟ್ಟೆಗಳಲ್ಲಿ ಸಿಲುಕುವಂತಾಗಿದೆ. ಗಲ್ಫ್ ಬದಲು ಬೇರೆ ದೇಶಗಳಿಗೆ ರಪ್ತು ಮಾಡೋಣ ಅಂದರೆ ರಪ್ತು ಮಾಡುವ ಸುಂಕ ಬಾಡಿಗೆಯೂ ಕೂಡಾ ಹೆಚ್ಚಳವಾಗಿದೆ. ಈ ಬ್ಯಾಡಗಿ ಮೆಣಸಿನಕಾಯಿ ಮಸಾಲೆ ಪದಾರ್ಥಗಳ ತಯಾರಿಕೆ, ಖಾರದ ಪುಡಿ ತಯಾರಿಕೆ ಅಷ್ಟೇ ಅಲ್ಲಸೌಂದರ&zwj;್ಯವರ್ಧಕ ಲಿಪ್&zwnj;ಸ್ಟಿಕ್&zwnj;, ನೇಲ್&zwnj;ಪಾಲಿಷ್&zwnj; ತಯಾರಿಕೆಯಲ್ಲೂ ಬಳಕೆಯಾಗುತ್ತದೆ.&lt;/p&gt;&lt;img&gt;&lt;p&gt;ಮಲೇಶಿಯಾ ಇಂಡೋನೇಶಿಯಾ, ಬಾಲಿ, ಥೈಲ್ಯಾಂಡ್, ಸಿಂಗಪೂರ್ ದೇಶಗಳಿಗೆ ಈ ಬ್ಯಾಡಗಿ ಮೆಣಸಿನಕಾಯಿ ರಫ್ತಾಗುತ್ತೆ. ಆದರೆ ಮೆಣಸಿನಕಾಯಿ ರಪ್ತು ಮಾಡುವ ಕಂಟೇನರ್&zwnj;ಗಳ ಬೆಲೆಯಲ್ಲೂ ದಿಢೀರ್ ಏರಿಕೆಯಾಗಿದೆ. ಮೊದಲು ಒಂದು ಕಂಟೇನರ್&zwnj;ಗೆ 800 ಯು.ಎಸ್ ಡಾಲರ್ ಬಾಡಿಗೆ ಇತ್ತು.&lt;/p&gt;&lt;img&gt;&lt;p&gt;ಈಗ ಒಂದು ಕಂಟೇನರ್ ಗಳ ಬಾಡಿಗೆ 3500 ಯುಎಸ್ ಡಾಲರ್ ದಾಟಿದೆ. ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ 1 ಕಂಟೇನರ್ ಗೆ 1,50,000 ಬಾಡಿಗೆ ಇತ್ತು. ಆದರೆ ಈಗ ಒಂದು ಕಂಟೇನರ್&zwnj;ಗೆ ಮೂರುವರೆ ಲಕ್ಷ ರೂಪಾಯಿ ದಾಟಿದೆ.&lt;/p&gt;&lt;img&gt;&lt;p&gt;ರಪ್ತು ಬಾಡಿಗೆ ಹೆಚ್ಚಳವಾಗಿರುವುದು ಸಹಜವಾಗೇ ಮೆಣಸಿನಕಾಯಿ ರಫ್ತಿನ ಮೇಲೆ ಮಾರಕ ಪರಿಣಾಮ ಬೀರಿದೆ. ಬ್ಯಾಡಗಿ ಮಾರುಕಟ್ಟೆಯಲ್ಲಿ ವಾರ್ಷಿಕವಾಗಿ ಸರಾಸರಿ 800 ರಿಂದ1000 ಕೋಟಿ ರೂ.ವಹಿವಾಟು ನಡೆಯುತ್ತಿತ್ತು. ಬ್ಯಾಡಗಿಗೆ ರಾಜ್ಯದ ಬಳ್ಳಾರಿ ಹಾಗೂ ಆಂಧ್ರಪದೇಶದ ನಾನಾ ಕಡೆಯಿಂದಲೂ ಮೆಣಸಿನಕಾಯಿ ಮಾರಾಟಕ್ಕೆ ವ್ಯಾಪಾರಿಗಳು ಬರುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಸತ್ತಿರುವುದಾಗಿ ಘೋಷಿಸಿದ ವೈದ್ಯರು: 35 ನಿಮಿಷ ನಿರಂತರ ಸಿಪಿಆರ್ ಮಾಡಿ ಪತ್ನಿಯ ಬದುಕಿಸಿದ ಪತಿ..&lt;/strong&gt;&lt;/p&gt;&lt;img&gt;&lt;p&gt;ಆದರೆ ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರು ತರುವ ಮೆಣಸಿನಕಾಯಿ ಬೆಲೆ ಕಡಿಮೆ ಆಗಲಿದೆ ಎಂದು ವರ್ತಕರು ಹೇಳುತ್ತಿದ್ದು,ಇದರಿಂದ ಮೆಣಸಿನಕಾಯಿ ಬೆಳೆದ ರೈತರಲ್ಲೂ ಆತಂಕ ಮನೆ ಮಾಡಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನನ್ನ ಬ್ರೇಕಪ್&zwnj;ಗೆ ಇವರೇ ಕಾರಣ : ಅವಳಿ ಸೋದರಿಗೆ 40 ಬಾರಿ ಇರಿದು ಕೊಂದ ಟೆಕ್ಕಿ, ತಾಯಿ ಮೇಲೂ ಹಲ್ಲೆ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/effect-of-the-us-israel-iran-war-on-byadagi-chili-exports-banned-growers-in-fear-o6ygcpf"/>
        </item>
        <item>
            <title><![CDATA[Fake Journalist: ₹5 ಲಕ್ಷ ಸಾಲ ಕೊಡಿಸುವೆ ಎಂದು ಬಲತ್ಕಾರ: ಹಾವೇರೀಲಿ ನಕಲಿ ಪತ್ರಕರ್ತನ ಬಂಧನ]]></title>
            <link>https://kannada.asianetnews.com/karnataka-districts/fake-journalist-arrested-for-ra-ping-woman-on-pretext-of-providing-loan-bankapur-haveri-rav/articleshow-rc5bt08</link>
            <guid isPermaLink="true">https://kannada.asianetnews.com/karnataka-districts/fake-journalist-arrested-for-ra-ping-woman-on-pretext-of-providing-loan-bankapur-haveri-rav/articleshow-rc5bt08</guid>
            <pubDate>Fri, 06 Mar 2026 06:14:45 +0530</pubDate>
            <description><![CDATA[&lt;p&gt;ಬಂಕಾಪುರದಲ್ಲಿ, ₹5 ಲಕ್ಷ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾ೧ಚಾರ ಎಸಗಿದ ನಕಲಿ ಪತ್ರಕರ್ತನನ್ನು ಬಂಧಿಸಲಾಗಿದೆ. ಆರೋಪಿ ದೀಪಕ್ ಉಪಳೆ, ಖಾಸಗಿ ಕ್ಷಣದ ವಿಡಿಯೋ ಬಳಸಿ ಸಂತ್ರಸ್ತೆಗೆ ಬ್ಲ್ಯಾಕ್&zwnj;ಮೇಲ್&zwnj; ಮಾಡುತ್ತಿದ್ದನು. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk096334xb2rdx909avp02he,imgname----------------------72--1772757388388.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಂಕಾಪುರ (ಮಾ.6):&lt;/strong&gt; ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾ೧ಚಾರ ಎಸಗಿ ಬಳಿಕ ಖಾಸಗಿ ಕ್ಷಣದ ವಿಡಿಯೋ ಮೂಲಕ ಬ್ಲ್ಯಾಕ್&zwnj; ಮೇಲ್&zwnj; ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನ ಮೇಲೆ ಕೇಸ್&zwnj; ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.&lt;/p&gt;&lt;p&gt;ದೀಪಕ್ ಉಪಳೆ ಬಂಧಿತ ಆರೋಪಿ. ಮಹಿಳೆಯೊಬ್ಬಳಿಗೆ ₹5 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, ಬಳಿಕ ಆಕೆಯನ್ನು ಪುಸಲಾಯಿಸಿ ಅತ್ಯಾ೧ಚಾರ ಎಸಗಿದ್ದಾನೆ. ಲಾಡ್ಜಗಳು ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ೧ಚಾರ ಎಸಗಿ, ಬಳಿಕ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದ ಈತ, ಸಹಕರಿಸದಿದ್ದರೆ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ದೂರಿದ್ದಾಳೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಕಿಮ್ಮನೆ ರತ್ನಾಕರ್ ಆಪ್ತನಿಂದ ಮಹಿಳೆಗೆ ವಂಚನೆ; ಅದಾನಿ ಗ್ರೂಪ್&zwnj;ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಪಂಗನಾಮ!&lt;/p&gt;&lt;p&gt;ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/fake-journalist-arrested-for-ra-ping-woman-on-pretext-of-providing-loan-bankapur-haveri-rav/articleshow-rc5bt08"/>
        </item>
        <item>
            <title><![CDATA[ಮಟ್ಕಾ ವಿಚಾರಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ್ ಸಸ್ಪೆಂಡ್; ಶಾಸಕ ರುದ್ರಪ್ಪ ಲಮಾಣಿ ಕೆಲಸಕ್ಕೆ ಚಪ್ಪಾಳೆ!]]></title>
            <link>https://kannada.asianetnews.com/karnataka-districts/haveri-guttala-psi-basanagouda-biradar-suspended-deputy-speaker-rudrappa-lamani-personally-matka-raid-sat/articleshow-tiltudf</link>
            <guid isPermaLink="true">https://kannada.asianetnews.com/karnataka-districts/haveri-guttala-psi-basanagouda-biradar-suspended-deputy-speaker-rudrappa-lamani-personally-matka-raid-sat/articleshow-tiltudf</guid>
            <pubDate>Thu, 05 Mar 2026 07:45:54 +0530</pubDate>
            <description><![CDATA[&lt;p&gt;ಹಾವೇರಿಯ ಗುತ್ತಲದಲ್ಲಿ ಮಟ್ಕಾ ದಂಧೆ ವಿರುದ್ಧ ಸಾರ್ವಜನಿಕರು ದೂರಿದಾಗ, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರೇ ಖುದ್ದು ದಾಳಿ ನಡೆಸಿ ಬುಕ್ಕಿಯನ್ನು ಹಿಡಿದರು. ಈ ಘಟನೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಐಜಿಪಿ ರವಿಕಾಂತೇಗೌಡ ಅವರು ಗುತ್ತಲ ಪಿಎಸ್ಐ ಅವರನ್ನು ಅಮಾನತುಗೊಳಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjxwec25ywns7j55f5xj9e2w,imgname-rudrappa-lamani-matka-rai-police-suspended-1772676919365.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.05): ಪೊ&lt;/strong&gt;ಲೀಸ್ ಇಲಾಖೆಯ ಕೆಲಸವನ್ನು ಸ್ವತಃ ಶಾಸಕರು ಹಾಗೂ ಡೆಪ್ಯೂಟಿ ಸ್ಪೀಕರ್ ಅವರೇ ಮಾಡಬೇಕಾದ ಅನಿವಾರ್ಯತೆ ಎದುರಾದ ಬೆನ್ನಲ್ಲೇ, ಕರ್ತವ್ಯ ಲೋಪದ ಆರೋಪದಡಿ ಹಾವೇರಿ ಜಿಲ್ಲೆಯ ಗುತ್ತಲ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಈ ಶಿಸ್ತು ಕ್ರಮ ಕೈಗೊಂಡಿದ್ದಾರೆ.&lt;/p&gt;&lt;h2&gt;&lt;strong&gt;ಏನಿದು ಘಟನೆ?&lt;/strong&gt;&lt;/h2&gt;&lt;p&gt;ಕೆಲ ದಿನಗಳ ಹಿಂದೆ ವಿಧಾನಸಭೆಯ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯ ಗುತ್ತಲ ಪಟ್ಟಣಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗಾಗಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರು ಶಾಸಕರನ್ನು ಮುತ್ತುವರೆದು ಗುತ್ತಲ ಪಟ್ಟಣದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಮಟ್ಕಾ ದಂಧೆಯ ಬಗ್ಗೆ ದೂರು ನೀಡಿದ್ದರು. 'ಪಟ್ಟಣದಲ್ಲಿ ಹಗಲು-ರಾತ್ರಿ ಮಟ್ಕಾ ದಂಧೆ ನಡೆಯುತ್ತಿದೆ, ಇದರಿಂದ ನೂರಾರು ಬಡ ಕುಟುಂಬಗಳು ಬೀದಿಗೆ ಬರುತ್ತಿವೆ. ಪೊಲೀಸರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ' ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.&lt;/p&gt;&lt;h2&gt;&lt;strong&gt;ಖುದ್ದು ಕಾರ್ಯಾಚರಣೆಗಿಳಿದ ಡೆಪ್ಯೂಟಿ ಸ್ಪೀಕರ್:&lt;/strong&gt;&lt;/h2&gt;&lt;p&gt;ಜನರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ರುದ್ರಪ್ಪ ಲಮಾಣಿ ಅವರು, ಅಧಿಕಾರಿಗಳಿಗೆ ಸೂಚನೆ ನೀಡುವ ಬದಲು ತಾವೇ ಖುದ್ದಾಗಿ ಅಖಾಡಕ್ಕಿಳಿದರು. ಸಾರ್ವಜನಿಕರು ತೋರಿಸಿದ ಮಟ್ಕಾ ಅಡ್ಡೆಯ ಮೇಲೆ ದಿಢೀರ್ ಭೇಟಿ ನೀಡಿದ ಅವರು, ಅಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಬುಕ್ಕಿಯನ್ನು ರೆಡ್&zwnj;ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ದೃಶ್ಯವನ್ನು ಕಂಡು ಅಲ್ಲಿದ್ದ ಜನರೇ ದಂಗಾಗಿದ್ದರು.&lt;/p&gt;&lt;h2&gt;&lt;strong&gt;ಖಾಕಿ ಪಡೆಗೆ ಮುಜುಗರ, ಪಿಎಸ್ಐ ಅಮಾನತು:&lt;/strong&gt;&lt;/h2&gt;&lt;p&gt;ಮಟ್ಕಾ ದಂಧೆಕೋರರನ್ನು ಹಿಡಿಯಲು ಸ್ವತಃ ಡೆಪ್ಯೂಟಿ ಸ್ಪೀಕರ್ ಅವರೇ ಬರಬೇಕಾಯಿತು ಎಂಬುದು ಪೊಲೀಸ್ ಇಲಾಖೆಗೆ ಭಾರಿ ಮುಜುಗರ ತಂದೊಡ್ಡಿತ್ತು. 'ಪೊಲೀಸರು ಏನು ಮಾಡುತ್ತಿದ್ದಾರೆ? ಅವರ ಮೂಗಿನ ನೇರಕ್ಕೇ ದಂಧೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದಿದ್ದರೆ ಹೇಗೆ?' ಎಂಬ ಸಾರ್ವಜನಿಕ ಪ್ರಶ್ನೆಗಳು ಎದ್ದಿದ್ದವು. ಈ ಹಿನ್ನೆಲೆಯಲ್ಲಿ ಗುತ್ತಲ ಠಾಣೆಯ ಪಿಎಸ್ಐ ಬಸನಗೌಡ ಬಿರಾದಾರ್ ಅವರು ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ.&lt;/p&gt;&lt;h2&gt;&lt;strong&gt;ಐಜಿಪಿ ಖಡಕ್ ಆದೇಶ:&lt;/strong&gt;&lt;/h2&gt;&lt;p&gt;ಪ್ರಕರಣದ ಗಾಂಭೀರ್ಯ ಅರಿತ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿಎಸ್ಐ ಬಸನಗೌಡ ಬಿರಾದಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಲಾಖೆಯ ಗೌರವಕ್ಕೆ ಧಕ್ಕೆ ತರುವ ಮತ್ತು ಅಕ್ರಮ ದಂಧೆಗಳಿಗೆ ಸಾಥ್ ನೀಡುವ ಅಧಿಕಾರಿಗಳನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ರವಾನಿಸಲಾಗಿದೆ. ಸದ್ಯ ಗುತ್ತಲ ಪಟ್ಟಣದಲ್ಲಿ ಈ ಘಟನೆ ದೊಡ್ಡ ಚರ್ಚೆಗೆ ಗ್ರಾಸವಾಗಿದ್ದು, ಶಾಸಕರ ಸಮಯಪ್ರಜ್ಞೆ ಮತ್ತು ಐಜಿಪಿಯವರ ತಕ್ಷಣದ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/haveri-guttala-psi-basanagouda-biradar-suspended-deputy-speaker-rudrappa-lamani-personally-matka-raid-sat/articleshow-tiltudf"/>
        </item>
        <item>
            <title><![CDATA[Karnataka Budget 2026-27: ಹಿಂದಿನ ಬಜೆಟ್‌ನಿಂದ ನಿರಾಸೆ, ಈ ಬಾರಿ ಹಾವೇರಿ ಜನರ ಬೇಡಿಕೆ ಈಡೇರುತ್ತಾ?]]></title>
            <link>https://kannada.asianetnews.com/karnataka-districts/karnataka-budget-live-updates-will-haveri-s-demands-be-met-this-time/articleshow-va19dx3</link>
            <guid isPermaLink="true">https://kannada.asianetnews.com/karnataka-districts/karnataka-budget-live-updates-will-haveri-s-demands-be-met-this-time/articleshow-va19dx3</guid>
            <pubDate>Fri, 06 Mar 2026 10:37:11 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್&zwnj;ನತ್ತ ಹಾವೇರಿ ಜಿಲ್ಲೆಯು ದೊಡ್ಡ ನಿರೀಕ್ಷೆ ಇಟ್ಟುಕೊಂಡಿದೆ. ಹಿಂದಿನ ಬಜೆಟ್&zwnj; ನಿರಾಸೆ ಅನುಭವಿಸಿದ್ದ ಜಿಲ್ಲೆಯು, ಈ ಬಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರತ್ಯೇಕ ಡಿಸಿಸಿ ಬ್ಯಾಂಕ್, ಕೈಗಾರಿಕೆಗಳ ನೀರಾವರಿ ಯೋಜನೆ ಪ್ರಮುಖ ಬೇಡಿಕೆಗಳ ಈಡೇರುತ್ತಾ?&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjzjpedzcpxf3x3qea5js3c8,imgname-state-budget-2026-live-blog-05-1772733807039.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ನಾರಾಯಣ ಹೆಗಡೆ&lt;/strong&gt;&lt;/p&gt;&lt;p&gt;&lt;strong&gt;&amp;nbsp;ಹಾವೇರಿ (ಮಾ.6): &lt;/strong&gt;ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ ಆಡಳಿತಾರೂಢ ಕಾಂಗ್ರೆಸ್&zwnj; ಶಾಸಕರಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ. 6ರಂದು ಮಂಡಿಸಲಿರುವ ದಾಖಲೆಯ ಬಜೆಟ್&zwnj;ನತ್ತ ಎಲ್ಲರ ಚಿತ್ತ ನೆಟ್ಟಿದೆ. ಹಿಂದಿನ ಎರಡು ಬಜೆಟ್&zwnj;ನಲ್ಲಿ ಏನೂ ಸಿಗದೇ ನಿರಾಸೆಯಾಗಿದ್ದ ಜಿಲ್ಲೆಯ ಜನರು ಈ ಸಲವಾದರೂ ವಿಶೇಷ ಕೊಡುಗೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.&lt;/p&gt;&lt;p&gt;ಪ್ರಸ್ತುತ ಸರ್ಕಾರದ ಕಳೆದೆರಡು ವರ್ಷದ ಬಜೆಟ್&zwnj;ನಲ್ಲಿ ಜಿಲ್ಲೆಗೆ ಏನೂ ಸಿಕ್ಕಿಲ್ಲ, ಹಲವು ವರ್ಷಗಳ ಹಿಂದೆಯೇ ಆರಂಭಗೊಂಡಿದ್ದ ಯೋಜನೆಗಳನ್ನೇ ಪ್ರಸ್ತಾಪಿಸಲಾಗಿತ್ತು. ಹೊಸ ಜಿಲ್ಲೆಗಳ ಪೈಕಿ ಹಾವೇರಿ ಜಿಲ್ಲೆ ಅತ್ಯಂತ ಹಿಂದುಳಿದಿದೆ. ಜಿಲ್ಲಾ ಕೇಂದ್ರವಾಗಿ 27 ವರ್ಷ ಗತಿಸಿದರೂ ಹಾವೇರಿ ಅಭಿವೃದ್ಧಿ ಮಾತ್ರ ಅಷ್ಟಕಷ್ಟೇ. ತಾಲೂಕು ಕೇಂದ್ರಗಳ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಮೂಲಸೌಲಭ್ಯಗಳ ಕೊರತೆ ಎಲ್ಲ ಕ್ಷೇತ್ರಗಳಲ್ಲಿ ಎದ್ದು ಕಾಣುತ್ತಿದೆ.&lt;/p&gt;&lt;p&gt;&lt;strong&gt;ಬೇಕಿದೆ ಸೂಪರ್&zwnj; ಸ್ಪೆಷಾಲಿಟಿ ಆಸ್ಪತ್ರೆ: &lt;/strong&gt;ಈ ಬಾರಿಯ ಬಜೆಟ್&zwnj;ನಲ್ಲಿ ಮೆಡಿಕಲ್ ಕಾಲೇಜ್ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಈಗಿನ ಮುಖ್ಯ ಬೇಡಿಕೆಗಳಾಗಿವೆ. ಜಿಲ್ಲೆಯಲ್ಲಿ ರೈತರು ಹೆಚ್ಚಿದ್ದು, ಸಮರ್ಪಕವಾಗಿ ಬೆಳೆ ಸಾಲ ಸಿಗುತ್ತಿಲ್ಲ. ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ಶೂನ್ಯ ಬಡ್ಡಿ ದರದ ಬೆಳೆ ಸಾಲ ಸಿಗುತ್ತಿಲ್ಲ. ಅದಕ್ಕಾಗಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಬೇಡಿಕೆ ಇದೆ. ಕೃಷಿ ಪ್ರಧಾನ ಜಿಲ್ಲೆಯಾಗಿರುವ ಹಿನ್ನೆಲೆ ರೈತರು ಬೆಳೆದಂತೆ ಉತ್ಪನ್ನಗಳಿಗೆ ಪೂರಕವಾಗುವಂತಹ ಕೈಗಾರಿಕೆಗಳನ್ನು ಸ್ಥಾಪಿಸಬೇಕು, ಬೇಡ್ತಿ-ವರದಾ ನದಿ ಜೋಡಿಸಬೇಕು ಎಂಬುದು ರೈತ ಮುಖಂಡರ ಒತ್ತಾಸೆಯಾಗಿದೆ. ಕೃಷಿ ಪೂರಕ ಕೈಗಾರಿಕೆ ಸ್ಥಾಪಿತಗೊಂಡರೆ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ, ಸ್ಥಳೀಯವಾಗಿ ಮಾರುಕಟ್ಟೆ ಸೌಲಭ್ಯ ಸಿಗಲಿದೆ. ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವಂತೆ ಬೃಹತ್ ಕೈಗಾರಿಕೆಗಳ ಸ್ಥಾಪನೆಗೂ ಒತ್ತು ನೀಡಿ ಕೈಗಾರಿಕಾ ಹಬ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು, ಬ್ಯಾಡಗಿ ಮಾರುಕಟ್ಟೆ ಅಭಿವೃದ್ಧಿ ಆಗಬೇಕು ಎಂಬುದು ಜನರ ಒತ್ತಾಸೆಯಾಗಿದೆ. ಹಾವೇರಿ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಅನುದಾನ, ನೀರಾವರಿ ಯೋಜನೆಗಳ ಅನುಷ್ಠಾನ, ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು, ನೂತನ ತಾಲೂಕು ರಟ್ಟೀಹಳ್ಳಿಯ ಅಭಿವೃದ್ಧಿ, ಜಿಲ್ಲೆಯ ಪ್ರವಾಸಿ ತಾಣಗಳಾದ ಭಕ್ತಶ್ರೇಷ್ಠ ಕನಕದಾಸರ ಕಾಗಿನೆಲೆಯನ್ನು ಕೂಡಲ ಸಂಗಮದ ಮಾದರಿಯಲ್ಲಿ ವಿಶ್ವಮಟ್ಟದ ಪ್ರವಾಸಿ ತಾಣವಾಗಿ ರೂಪಿಸುವ ಕಾರ್ಯಕ್ಕೆ ಅನುದಾನ, ಸರ್ವಜ್ಞ ಪ್ರಾಧಿಕಾರಕ್ಕೆ ಅನುದಾನ, ಜಿಲ್ಲಾ ಕೇಂದ್ರವಾದ ಹಾವೇರಿ ನಗರದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಯೋಜನೆ, ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣ, ಹಾವೇರಿ ನಗರದಲ್ಲಿ ರಿಂಗ್ ರೋಡ್ ನಿರ್ಮಾಣ ಜತೆಗೆ ಒಳಚರಂಡಿ ವ್ಯವಸ್ಥೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಅನುದಾನದ ನಿರೀಕ್ಷೆಯಲ್ಲಿ ಜನರಿದ್ದಾರೆ.&lt;/p&gt;&lt;p&gt;&lt;strong&gt;ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೆಚ್ಚಿದ ಬೇಡಿಕೆ: &lt;/strong&gt;ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಎನಿಸಿರುವ ಮೆಡಿಕಲ್ ಕಾಲೇಜು ಕಟ್ಟಡ ಲೋಕಾರ್ಪಣೆಗೊಂಡಿದೆ. ಮೆಡಿಕಲ್ ಕಾಲೇಜ್ ಆವರಣದಲ್ಲೇ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಜಿಲ್ಲಾ ಕೇಂದ್ರವಾಗಿ ಎರಡೂವರೆ ದಶಕ ಕಳೆದಿದ್ದರೂ ತರ್ತು ಸಂದರ್ಭದಲ್ಲಿ ರೋಗಿಗಳನ್ನು ಹುಬ್ಬಳ್ಳಿ, ದಾವಣಗೆರೆಗೆ ಕರೆದುಕೊಂಡು ಹೋಗುವ ಸ್ಥಿತಿ ಇದೆ. ಹೀಗಾಗಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂಬುದು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಬೇಡಿಕೆ ಆಗಿದೆ. ಇದಕ್ಕೆ ಪೂರಕವಾಗಿಯೇ ಮೆಡಿಕಲ್ ಕಾಲೇಜ್ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದರು. ಆದರೆ, ಕಳೆದ ತಿಂಗಳು ನಡೆದ ಭೂ ಗ್ಯಾರಂಟಿ ಸಮಾವೇಶದಲ್ಲಿ `ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ'''' ಘೋಷಣೆ ಮಾಡುವಂತೆ ಶಾಸಕರು ಒತ್ತಾಯಿಸಿದರು. ಆಗ ಸಿಎಂ ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದಷ್ಟೇ ಹೇಳಿದರು. ಹೀಗಾಗಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕಥೆ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/karnataka-budget-live-updates-will-haveri-s-demands-be-met-this-time/articleshow-va19dx3"/>
        </item>
        <item>
            <title><![CDATA[ಹಾವೇರಿ: ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ; 10ಕ್ಕೂ ಅಧಿಕ ಎಮ್ಮೆಗಳು ಸಜೀವ ದಹನ, ರೈತ ಕಂಗಾಲು!]]></title>
            <link>https://kannada.asianetnews.com/karnataka-districts/haveri-kanavalli-fire-accident-buffaloes-burnt-alive-cow-shed-gutted-police-probe-san/articleshow-wrprg9l</link>
            <guid isPermaLink="true">https://kannada.asianetnews.com/karnataka-districts/haveri-kanavalli-fire-accident-buffaloes-burnt-alive-cow-shed-gutted-police-probe-san/articleshow-wrprg9l</guid>
            <pubDate>Thu, 19 Mar 2026 21:31:03 +0530</pubDate>
            <description><![CDATA[ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ರೈತರೊಬ್ಬರಿಗೆ ಸೇರಿದ 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನವಾಗಿವೆ. ಇದು ತಿಂಗಳ ಅವಧಿಯಲ್ಲಿ ನಡೆದ ಐದನೇ ಬೆಂಕಿ ಅವಘಡವಾಗಿದ್ದು, ಗ್ರಾಮಸ್ಥರು ಕಿಡಿಗೇಡಿಗಳ ಕೃತ್ಯದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01km3d2dp45mx21prfq1tdqxet,imgname-haveri-fire-1773935867588.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.19): &lt;/strong&gt;ಜಿಲ್ಲೆಯ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10ಕ್ಕೂ ಅಧಿಕ ಎಮ್ಮೆಗಳು ಸಜೀವವಾಗಿ ದಹನಗೊಂಡಿರುವ ಧಾರುಣ ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶ ಜಾಡರ್ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದೆ.&lt;/p&gt;&lt;p&gt;ಬೆಂಕಿಯ ಕೆನ್ನಾಲಗೆಗೆ ಕೊಟ್ಟಿಗೆಯಲ್ಲಿದ್ದ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಎಮ್ಮೆಗಳು ಮತ್ತು ಮೇವು ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂಕ ಪ್ರಾಣಿಗಳು ಪ್ರಾಣಬಿಟ್ಟಿದ್ದವು.&lt;/p&gt;&lt;h2&gt;&lt;strong&gt;ಕಿಡಿಗೇಡಿಗಳ ಕೃತ್ಯದ ಶಂಕೆ?&lt;/strong&gt;&lt;/h2&gt;&lt;p&gt;ಕನವಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಐದನೇ ಬೆಂಕಿ ಅವಘಡವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದು ಕೇವಲ ಆಕಸ್ಮಿಕವಲ್ಲ, ಕಿಡಿಗೇಡಿಗಳ ಕೈವಾಡವಿರಬಹುದು ಎಂದು ಶಂಕಿಸಿರುವ ಗ್ರಾಮಸ್ಥರು, ಕೂಡಲೇ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಬೇಕೆಂದು ಒತ್ತಾಯಿಸಿದ್ದಾರೆ. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>haveri</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/haveri-kanavalli-fire-accident-buffaloes-burnt-alive-cow-shed-gutted-police-probe-san/articleshow-wrprg9l"/>
        </item>
        <item>
            <title><![CDATA[Karnataka Budget 2026: ರಾಜ್ಯಕ್ಕೆ 'ಸಾಲ'ದ ಭಾಗ್ಯ, ಅಭಿವೃದ್ಧಿಗೆ ಎಳ್ಳುನೀರು, ಇದೊಂದು ರೈತ ವಿರೋಧಿ ಬಜೆಟ್ -ಬೊಮ್ಮಾಯಿ ಕಿಡಿ]]></title>
            <link>https://kannada.asianetnews.com/state/cm-siddaramaiah-s-17th-budget-a-flop-show-says-mp-basavaraj-bommai/articleshow-xl8cxkq</link>
            <guid isPermaLink="true">https://kannada.asianetnews.com/state/cm-siddaramaiah-s-17th-budget-a-flop-show-says-mp-basavaraj-bommai/articleshow-xl8cxkq</guid>
            <pubDate>Fri, 06 Mar 2026 13:00:06 +0530</pubDate>
            <description><![CDATA[&lt;p&gt;ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯನವರ ಬಜೆಟನ್ನು ಅಭಿವೃದ್ಧಿ ಶೂನ್ಯ ಮತ್ತು ಪ್ರಗತಿ ರಹಿತ ಎಂದು ಟೀಕಿಸಿದ್ದಾರೆ. ಈ ಬಜೆಟ್ ರಾಜ್ಯವನ್ನು ಸಾಲದ ಸುಳಿಗೆ ತಳ್ಳಿದ್ದು, ನೀರಾವರಿ ಯೋಜನೆಗಳನ್ನು ಕಡೆಗಣಿಸಿದೆ &amp;nbsp;ಒಳಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯಕ್ಕೆ ಅನ್ಯಾಯ ಎಂದು ಆರೋಪಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kk10h5wga6jbmxg0mwzxph9t,imgname----------------------79--1772781868944.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಮಾ.6):&lt;/strong&gt; ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ಸಂಪೂರ್ಣವಾಗಿ ಅಭಿವೃದ್ಧಿ ಶೂನ್ಯ ಮತ್ತು ಪ್ರಗತಿ ರಹಿತವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ಟೀಕಿಸಿದ್ದಾರೆ.&lt;/p&gt;&lt;h2&gt;ದಿಕ್ಕು ದೆಸೆ ಇಲ್ಲದ ಶೂನ್ಯ ಬಜೆಟ್&lt;/h2&gt;&lt;p&gt;ರಾಜ್ಯ ಬಜೆಟ್ ವಿಚಾರವಾಗಿ ಇಂದು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೊಂದು ದಿಕ್ಕು ದೆಸೆ ಇಲ್ಲದ ಬಜೆಟ್. 17 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಸಿದ್ದರಾಮಯ್ಯ ಅವರಿಂದ ಇಂತಹ ಕಳಪೆ ಮಟ್ಟದ ಬಜೆಟ್ ಮಂಡನೆಯನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;h3&gt;ಸಾಲದ ಸುಳಿಯಲ್ಲಿ ಕರ್ನಾಟಕ&lt;/h3&gt;&lt;p&gt;ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸರ್ಕಾರ ಅಧೋಗತಿಗೆ ತಳ್ಳಿದೆ ಎಂದು ಆರೋಪಿಸಿದ ಬೊಮ್ಮಾಯಿ ಅವರು, 'ಸರ್ಕಾರ ಬರೋಬ್ಬರಿ 1 ಲಕ್ಷದ 32 ಸಾವಿರದ 100 ಕೋಟಿ ರೂಪಾಯಿ ಸಾಲ ಮಾಡಿದೆ. ಇದಕ್ಕೆ ಪೂರಕವಾಗಿ ಈಗ ಮತ್ತೆ 25 ಸಾವಿರ ಕೋಟಿ ರೂಪಾಯಿ ಹೊಸ ಸಾಲಕ್ಕೆ ಕೈಹಾಕಿದೆ. ಈ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೆ ದೂಡುತ್ತಿದೆ. ಒಟ್ಟಾರೆಯಾಗಿ ಕರ್ನಾಟಕವನ್ನು 15 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದಾರೆ ಎಂದು ಅಂಕಿಅಂಶಗಳ ಸಹಿತ ವಾಗ್ದಾಳಿ ನಡೆಸಿದರು.&lt;/p&gt;&lt;h3&gt;ನೀರಾವರಿ ಯೋಜನೆಗಳಿಗೆ ಎಳ್ಳುನೀರು&lt;/h3&gt;&lt;p&gt;ಕೃಷಿ ಮತ್ತು ನೀರಾವರಿ ಕ್ಷೇತ್ರಕ್ಕೆ ಈ ಬಜೆಟ್&zwnj;ನಲ್ಲಿ ಅನ್ಯಾಯವಾಗಿದೆ ಎಂದು ಬೊಮ್ಮಾಯಿ ದೂರಿದ್ದಾರೆ. ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಗಳಿಗೆ ಅತ್ಯಂತ ಕಡಿಮೆ ಅನುದಾನ ನೀಡಲಾಗಿದೆ. ಅದರಲ್ಲೂ ರಾಜ್ಯದ ಜೀವನಾಡಿಯಾದ 'ಕೃಷ್ಣಾ ಮೇಲ್ದಂಡೆ' ಯೋಜನೆಗೆ ಸರ್ಕಾರ ನಯಾಪೈಸೆ ಹಣ ಮೀಸಲಿಟ್ಟಿಲ್ಲ. ನೀರಾವರಿ ವಿಚಾರದಲ್ಲಿ ಈ ಸರ್ಕಾರಕ್ಕೆ ಕನಿಷ್ಠ ಆಸಕ್ತಿಯೂ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;h3&gt;ಒಳಮೀಸಲಾತಿ ಜಾರಿಗೆ ಕುಂಟು ನೆಪ&lt;/h3&gt;&lt;p&gt;ರಾಜ್ಯದಲ್ಲಿ ಉಂಟಾಗಿರುವ ಒಳಮೀಸಲಾತಿ ಗೊಂದಲಕ್ಕೆ ನೇರವಾಗಿ ಸರ್ಕಾರವೇ ಹೊಣೆ ಎಂದು ಬೊಮ್ಮಾಯಿ ಗುಡುಗಿದ್ದಾರೆ. ಬೆಳಗಾವಿ ಅಧಿವೇಶನದಲ್ಲೇ ಈ ಕುರಿತು ತೀರ್ಮಾನವಾಗಿದ್ದರೂ, ಈಗ ಸಚಿವರಲ್ಲೇ ಭಿನ್ನಾಭಿಪ್ರಾಯ ಮೂಡಿಸಿ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಇದು ದಲಿತ ಸಮುದಾಯಕ್ಕೆ ಮಾಡುತ್ತಿರುವ ಘೋರ ಅನ್ಯಾಯ ಎಂದು ವಾಗ್ದಾಳಿ ನಡೆಸಿದರು.&lt;/p&gt;&lt;p&gt;&lt;strong&gt;ಬಿಜೆಪಿಯಿಂದ ಬೀದಿಗಿಳಿದು ಹೋರಾಟದ ಎಚ್ಚರಿಕೆ&lt;/strong&gt;&lt;/p&gt;&lt;p&gt;ಒಳಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರ ಕೂಡಲೇ ತಿದ್ದುಪಡಿ ತಂದು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಮಾಜಿ ಸಿಎಂ, ಒಂದು ವೇಳೆ ಸರ್ಕಾರ ವಿಳಂಬ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.&lt;/p&gt;]]></content:encoded>
            <category>haveri</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/cm-siddaramaiah-s-17th-budget-a-flop-show-says-mp-basavaraj-bommai/articleshow-xl8cxkq"/>
        </item>
    </channel>
</rss>
