<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Fri, 21 Aug 2026 11:45:09 +0530</lastBuildDate>
        <atom:link href="https://kannada.asianetnews.com/rss/haveri" rel="self" type="application/rss+xml"/>
        <item>
            <title><![CDATA[ಐತಿಹಾಸಿಕ ಆಂಜನೇಯ ದೇವಾಲಯದೊಳಗೆ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್!]]></title>
            <link>https://kannada.asianetnews.com/viral/haveri-shiggaon-anjaneya-temple-incident-accused-arrested-police-complaint/articleshow-373vpel</link>
            <guid isPermaLink="true">https://kannada.asianetnews.com/viral/haveri-shiggaon-anjaneya-temple-incident-accused-arrested-police-complaint/articleshow-373vpel</guid>
            <pubDate>Fri, 21 Aug 2026 11:45:01 +0530</pubDate>
            <description><![CDATA[&lt;p&gt;ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಘಟನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0hezca902chnqazqx8gft6p,imgname-haveri-anjaneya-temple-1787292528969.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಆ.21): ಶಿ&lt;/strong&gt;ಗ್ಗಾವಿ ಪಟ್ಟಣದ ಟೆಂಪೋ ನಿಲ್ದಾಣದ ಬಳಿಯಿರುವ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಹಮದ್ ಜಾಪರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂದು ಗುರುತಿಸಲಾಗಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಬುಧವಾರ ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳು ನಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ದೇವಾಲಯದ ಒಳಪ್ರವೇಶಿಸಿ ಅಶಿಸ್ತಿನಿಂದ ವರ್ತಿಸಿದ್ದನ್ನು ಗಮನಿಸಿದ ಸ್ಥಳೀಯರು ಆತನನ್ನು ತಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಸ್ಥಳದಿಂದ ತೆರಳಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸ್ ದೂರು ಹಾಗೂ ಬಂಧನ:&lt;/strong&gt;&lt;/h2&gt;&lt;p&gt;ಈ ಘಟನೆಗೆ ಸಂಬಂಧಿಸಿದಂತೆ ಸಿದ್ದಪ್ಪ ಶಿವಪ್ಪ ಕಾಳೆ ಎಂಬುವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ಶಿಗ್ಗಾವಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಠಾಣೆ ಎದುರು ಜಮಾಯಿಸಿದ ಸ್ಥಳೀಯರು:&lt;/strong&gt;&lt;/h2&gt;&lt;p&gt;ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರಾತ್ರಿ ಶಿಗ್ಗಾವಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/viral/haveri-shiggaon-anjaneya-temple-incident-accused-arrested-police-complaint/articleshow-373vpel"/>
        </item>
        <item>
            <title><![CDATA[ಮಗನ ಜನ್ಮದಿನಕ್ಕೆ  ಸ್ವಂತ ದುಡ್ಡಿನಲ್ಲಿ ಶಾಲೆಗೆ ಸುಣ್ಣಬಣ್ಣ ಮಾಡಿಸಿದ ಶಿಕ್ಷಕಿ ಉಮೈ ಸಲ್ಮಾ]]></title>
            <link>https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9</link>
            <guid isPermaLink="true">https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9</guid>
            <pubDate>Mon, 06 Jul 2026 06:23:56 +0530</pubDate>
            <description><![CDATA[&lt;p&gt;ಹಿರೇಕೆರೂರು ತಾಲೂಕಿನ ಹಂಸಭಾವಿ ಉರ್ದು ಶಾಲೆಯ ಮುಖ್ಯ ಶಿಕ್ಷಕಿ ಉಮೈ ಸಲ್ಮಾ, ತಮ್ಮ ಮಗನ ಜನ್ಮದಿನದ ನೆನಪಿಗಾಗಿ ಸ್ವಂತ ಹಣದಲ್ಲಿ ಶಾಲೆಗೆ ಸುಣ್ಣಬಣ್ಣ ಬಳಿಸಿ, ಆಟದ ಮೈದಾನ ನಿರ್ಮಿಸಿದ್ದಾರೆ. ಅವರ ಈ ಆದರ್ಶ ಕಾರ್ಯವು ಶಿಕ್ಷಕ ವಲಯದಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwtegz27bwq1h665spbx6p4c,imgname-urdu-school-teacher-1783299079239.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಉಮೈ ಸಲ್ಮಾ ಅವರು ತಮ್ಮ ಮಗ ಮಲಿಕ್ ರೆಹನ್ ಅವರ ಹುಟ್ಟುಹಬ್ಬದ ಅಂಗವಾಗಿ ₹ 2 ಲಕ್ಷ ಸ್ವಂತ ಹಣದಲ್ಲಿ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸಮಾಜಕ್ಕೆ ವಿಶಿಷ್ಟ ಹಾಗೂ ಮಾದರಿ ಸಂದೇಶವೊಂದನ್ನು ನೀಡಿದ್ದಾರೆ.&lt;/p&gt;&lt;h2&gt;&lt;strong&gt;ಶಾಲೆಗೆ ಉತ್ತಮ ಗುಣಮಟ್ಟದ ಸುಣ್ಣ-ಬಣ್ಣ&lt;/strong&gt;&lt;/h2&gt;&lt;p&gt;ಸಾಮಾನ್ಯವಾಗಿ ಜನರು ತಮ್ಮ ಮಕ್ಕಳ ಜನ್ಮದಿನವನ್ನು ಐಷಾರಾಮಿ ಹೋಟೆಲ್&zwnj;ಗಳಲ್ಲಿ ಅಥವಾ ಅನಗತ್ಯ ವೆಚ್ಚಗಳ ಮೂಲಕ ಆಚರಿಸಿಕೊಳ್ಳುವುದು ರೂಢಿ. ಆದರೆ ಶಿಕ್ಷಕಿ ಉಮೈ ಸಲ್ಮಾ ಅವರು ತಾವೇ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಳಿಲು ಸೇವೆ ಸಲ್ಲಿಸಲು ನಿರ್ಧರಿಸಿದರು. ತಮ್ಮ ಮಗನ ಜನ್ಮದಿನದ ಸವಿನೆನಪಿಗಾಗಿ ಸ್ವಂತ ₹ 2 ಲಕ್ಷ ವೆಚ್ಚದಲ್ಲಿ ಇಡೀ ಶಾಲೆಗೆ ಉತ್ತಮ ಗುಣಮಟ್ಟದ ಸುಣ್ಣ-ಬಣ್ಣ ಮಾಡಿಸಿದ್ದಾರೆ. ಅಷ್ಟೇ ಅಲ್ಲದೆ, ಶಾಲಾ ಮಕ್ಕಳಿಗೆ ಆಟವಾಡಲು ಸುಂದರ ಹಾಗೂ ಸುರಕ್ಷಿತವಾದ ಆಟದ ಮೈದಾನವನ್ನು ನಿರ್ಮಿಸಿಕೊಡುವ ಮೂಲಕ ಶಾಲೆಯ ಅಂದವನ್ನು ಹೆಚ್ಚಿಸಿದ್ದಾರೆ.&lt;/p&gt;&lt;p&gt;ಮುಖ್ಯ ಶಿಕ್ಷಕಿಯ ಈ ಸೇವಾ ಮನೋಭಾವ, ಉದಾರತೆ ಮತ್ತು ಶಿಕ್ಷಣದ ಮೇಲಿನ ಅಪಾರ ಕಾಳಜಿಯನ್ನು ಶ್ಲಾಘಿಸಿ, ಶಿಕ್ಷಕರ ಸಂಘವು ಅಭಿನಂದನೆ ಸಲ್ಲಿಸಿದೆ.&lt;/p&gt;&lt;h3&gt;&lt;strong&gt;ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಶಂಸೆ&lt;/strong&gt;&lt;/h3&gt;&lt;p&gt;ಉಮೈ ಸಲ್ಮಾ ಅವರ ಈ ಅಪೂರ್ವ ಕಾರ್ಯವು ಕೇವಲ ಹಿರೇಕೆರೂರು ತಾಲೂಕಿಗೆ ಮಾತ್ರವಲ್ಲದೆ, ಇಡೀ ಹಾವೇರಿ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಶಿಕ್ಷಕರಿಗೂ ಸ್ಫೂರ್ತಿದಾಯಕವಾಗಿದೆ. ಅವರ ಸಮಾಜಮುಖಿ ಚಿಂತನೆ, ಶಾಲಾ ಅಭಿವೃದ್ಧಿಯ ಮೇಲಿನ ಬದ್ಧತೆ ಮತ್ತು ಮಕ್ಕಳ ಭವಿಷ್ಯದ ಮೇಲಿನ ಪ್ರೀತಿ ಸದಾ ಸ್ಮರಣೀಯ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಶಂಸಿಸಿದ್ದಾರೆ. ಸರ್ಕಾರಿ ಶಾಲೆಯ ಚಿತ್ರಣವನ್ನೇ ಬದಲಾಯಿಸಿದ ಈ ಆದರ್ಶ ಶಿಕ್ಷಕಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-teacher-umai-salma-spends-rs-2-lakh-on-her-son-s-birthday-to-renovate-the-school-with-her-own-money-mrq/articleshow-4736pv9"/>
        </item>
        <item>
            <title><![CDATA[Haveri: ಸಾವಿನಲ್ಲೂ ಒಂದಾದ ಸತಿ-ಪತಿ: ಪತ್ನಿಯ ಅಗಲಿಕೆ ತಾಳಲಾರದೆ ಕೆಲವೇ ಗಂಟೆಗಳಲ್ಲಿ ಪ್ರಾಣಬಿಟ್ಟ ಪತಿ!]]></title>
            <link>https://kannada.asianetnews.com/karnataka-districts/inseparable-in-life-and-death-heartbroken-husband-passes-away-hours-after-wife-demise-in-haveri-gdp/articleshow-5ur2zk8</link>
            <guid isPermaLink="true">https://kannada.asianetnews.com/karnataka-districts/inseparable-in-life-and-death-heartbroken-husband-passes-away-hours-after-wife-demise-in-haveri-gdp/articleshow-5ur2zk8</guid>
            <pubDate>Mon, 27 Jul 2026 11:27:54 +0530</pubDate>
            <description><![CDATA[ಹಾವೇರಿ ಜಿಲ್ಲೆಯ ಹೆಸರೂರು ಗ್ರಾಮದಲ್ಲಿ 45 ವರ್ಷಗಳ ಕಾಲ ಅನ್ಯೋನ್ಯವಾಗಿ ಬಾಳಿದ ದಂಪತಿಗಳು ಸಾವಿನಲ್ಲೂ ಒಂದಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಪತ್ನಿ ನಿಧನರಾದ ಕೆಲವೇ ಗಂಟೆಗಳಲ್ಲಿ, ಅವರ ಅಗಲಿಕೆಯ ದುಃಖ ತಾಳಲಾರದೆ ಪತಿಯೂ ಕೊನೆಯುಸಿರೆಳೆದಿದ್ದಾರೆ. ಈ ಹೃದಯವಿದ್ರಾವಕ ಘಟನೆ ಇಡೀ ಗ್ರಾಮಸ್ಥರನ್ನು ಭಾವುಕರನ್ನಾಗಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kyh29fanmq36tx8xhe2j6wsz,imgname-haveri-couple-die-together-1785131744597.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಬದುಕಿದರೂ ಜೊತೆಯಾಗಿ, ಬಾಳದಿದ್ದರೂ ಜೊತೆಯಾಗಿ ಎನ್ನುವ ಹಿರಿಯರ ಮಾತು ಹಾವೇರಿ ಜಿಲ್ಲೆಯಲ್ಲಿ ಅಕ್ಷರಶಃ ನಿಜವಾಗಿದೆ. ದಾಂಪತ್ಯ ಜೀವನದ ಪವಿತ್ರತೆಗೆ ಸಾಕ್ಷಿಯೆಂಬಂತೆ, 45 ವರ್ಷಗಳ ಕಾಲ ಅನ್ಯೋನ್ಯವಾಗಿ ಬಾಳಿ ಬದುಕಿದ ಆದರ್ಶ ದಂಪತಿಗಳಿಬ್ಬರು ಸಾವಿನಲ್ಲೂ ಒಂದಾಗುವ ಮೂಲಕ ಇಡೀ ಗ್ರಾಮಸ್ಥರನ್ನು ಭಾವುಕರನ್ನಾಗಿಸಿದ್ದಾರೆ. ಪತ್ನಿ ನಿಧನರಾದ ಕೆಲವೇ ಗಂಟೆಗಳಲ್ಲಿ, ಆಕೆಯ ಅಗಲಿಕೆಯ ತೀವ್ರ ದುಃಖವನ್ನು ತಾಳಲಾರದೆ ಪತಿಯೂ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಹೆಸರೂರು ಗ್ರಾಮದಲ್ಲಿ ಜರುಗಿದೆ.&lt;/p&gt;&lt;h2&gt;45 ವರ್ಷಗಳ ಅನ್ಯೋನ್ಯ ದಾಂಪತ್ಯ&lt;/h2&gt;&lt;p&gt;ಹೆಸರೂರು ಗ್ರಾಮದ ನಿವಾಸಿಗಳಾದ ಜುಂಜಪ್ಪ ಬಾರ್ಕಿ (75 ವರ್ಷ) ಮತ್ತು ಶಾಂತಮ್ಮ (65 ವರ್ಷ) ಸಾವಿನಲ್ಲೂ ಒಂದಾದ ಅಪರೂಪದ ಸತಿ-ಪತಿಗಳು. ಕಳೆದ 45 ವರ್ಷಗಳ ದೀರ್ಘಾವಧಿಯಿಂದ ಈ ದಂಪತಿಗಳು ಯಾವುದೇ ಕಹಿ ಘಟನೆಗಳಿಲ್ಲದೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಹಳ್ಳಿಯ ಜನರ ಕಣ್ಣಿಗೆ ಆದರ್ಶ ಜೋಡಿಯಾಗಿ ಬದುಕಿದ್ದರು. ಒಬ್ಬರನ್ನು ಬಿಟ್ಟು ಮತ್ತೊಬ್ಬರು ಇರಲಾರದಷ್ಟು ಪ್ರೇಮ ಇವರದ್ದಾಗಿತ್ತು.&lt;/p&gt;&lt;h2&gt;ರಾತ್ರಿ ಪತ್ನಿ ಸಾವು, ಬೆಳಗ್ಗೆ ಪತಿ ನಿಧನ!&lt;/h2&gt;&lt;p&gt;ವಿಧಿಯ ಆಟ ವಿಚಿತ್ರವಾಗಿತ್ತು. ಭಾನುವಾರ ತಡರಾತ್ರಿ ಸುಮಾರು 12 ಗಂಟೆಯ ಸುಮಾರಿಗೆ ಪತ್ನಿ ಶಾಂತಮ್ಮ ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ಅರ್ಧಾಂಗಿಯ ಹಠಾತ್ ನಿಧನ ವಯೋವೃದ್ಧ ಜುಂಜಪ್ಪ ಅವರಿಗೆ ಸಹಿಸಿಕೊಳ್ಳಲು ಅಸಾಧ್ಯವಾದ ಆಘಾತವನ್ನು ನೀಡಿತು. 45 ವರ್ಷಗಳ ಕಾಲ ನೆರಳಿನಂತೆ ಜೊತೆಗಿದ್ದ ಹೆಂಡತಿಯ ಶವದ ಮುಂದೆ ಕುಳಿತು, &quot;ನೀನಿಲ್ಲದೆ ನಾ ಹೇಗೆ ಬದುಕಲಿ?&quot; ಎಂದು ಆ ವೃದ್ಧ ರಾತ್ರಿ ಇಡೀ ಕಣ್ಣೀರು ಹಾಕುತ್ತಾ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;p&gt;ಪತ್ನಿಯ ವಿಯೋಗದ ತೀವ್ರ ದುಃಖ ಮನಸ್ಸಿನ ಮೇಲೆ ಎಷ್ಟರಮಟ್ಟಿಗೆ ಬೀರಡಿತೆಂದರೆ, ಸೋಮವಾರ ಮುಂಜಾನೆ ಜುಂಜಪ್ಪ ಅವರ ಹೃದಯದ ಬಡಿತವೂ ನಿಂತುಹೋಗಿದೆ. ಪತ್ನಿ ತೀರಿಕೊಂಡ ಕೆಲವೇ ಗಂಟೆಗಳ ಅಂತರದಲ್ಲಿ ಪತಿ ಜುಂಜಪ್ಪ ಅವರೂ ಸಹ ನಿಧನರಾಗುವ ಮೂಲಕ ಪತ್ನಿಯ ಹಿಂದೆಯೇ ಮಸಣದ ಹಾದಿ ಹಿಡಿದರು.&lt;/p&gt;&lt;h2&gt;ಗ್ರಾಮಸ್ಥರ ಕಣ್ಣಾಲಿಗಳು ಒದ್ದೆ&lt;/h2&gt;&lt;p&gt;ಒಂದೇ ಮನೆಯಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ದಂಪತಿಗಳಿಬ್ಬರೂ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಇಡೀ ಹೆಸರೂರು ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಇಬ್ಬರ ಪಾರ್ಥಿವ ಶರೀರಗಳನ್ನು ಜೊತೆಯಾಗಿಯೇ ಇರಿಸಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಯಿತು.&lt;/p&gt;&lt;p&gt;ದಂಪತಿಗಳ ಈ ಅಪರೂಪದ ಪ್ರೀತಿ ಮತ್ತು ಸಾವಿನಲ್ಲೂ ಒಂದಾದ ನಿಷ್ಠೆಯನ್ನು ಕಂಡು ಗ್ರಾಮಸ್ಥರು ಹಾಗೂ ನೆರೆಹೊರೆಯವರು ತೀವ್ರ ಭಾವುಕರಾಗಿದ್ದಾರೆ. &quot;ಇಂತಹ ಸತಿ-ಪತಿಯರನ್ನು ನೋಡುವುದೇ ಅಪರೂಪ. ಬದುಕಿದ್ದಾಗಲೂ ಪ್ರೀತಿಯಿಂದ ಬಾಳಿದರು, ಈಗ ಸಾವಿನಲ್ಲೂ ಒಬ್ಬರನ್ನೊಬ್ಬರು ಬಿಟ್ಟಿರಲಾರದೆ ಒಟ್ಟಿಗೆ ಹೊರಟುಹೋದರು&quot; ಎಂದು ಗ್ರಾಮದ ಹಿರಿಯರು ಕಣ್ಣೀರು ಹಾಕುತ್ತಾ ದಂಪತಿಗಳ ಆತ್ಮಕ್ಕೆ ಶಾಂತಿ ಕೋರಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/inseparable-in-life-and-death-heartbroken-husband-passes-away-hours-after-wife-demise-in-haveri-gdp/articleshow-5ur2zk8"/>
        </item>
        <item>
            <title><![CDATA[ಹಾವೇರಿ: ಕಾರ ಹುಣ್ಣಿಮೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ರೈತನ ಮೇಲೆ ಹಲ್ಲೆ, ಪಟಾಕಿ ಸಿಡಿಸಿದ್ದೇ ತಪ್ಪಾಯ್ತಾ?]]></title>
            <link>https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08</link>
            <guid isPermaLink="true">https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08</guid>
            <pubDate>Tue, 30 Jun 2026 06:16:16 +0530</pubDate>
            <description><![CDATA[&lt;p&gt;ಕಾರ ಹುಣ್ಣಿಮೆ ದಿನದಂದು ಹೋರಿಗಳನ್ನ ಓಡಿಸುವ ಸ್ಪರ್ಧೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆಂದು ಅನ್ಯಕೋಮಿನ ಗುಂಪೊಂದು ರೈತನೋರ್ವನ ಕೈ &amp;nbsp;ಕಡಿದ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwazgqb6qpk2y42ktv76n8fv,imgname----------------------58--1782780026214.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾನಗಲ್ಲ (ಜೂ.30): &lt;/strong&gt;ಹಾವೇರಿ(Haveri) ಜಿಲ್ಲೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮ(Naregal village)ದಲ್ಲಿ ಕಾರಹುಣ್ಣಿಮೆ ಹಬ್ಬದಂಗವಾಗಿ ಸಂಪ್ರದಾಯದಂತೆ ಹೋರಿಗಳನ್ನು ಓಡಿಸುವ(Bull racing competition) ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಕಾರಣಕ್ಕೆ ಎರಡು ಕೋಮಿನ ಜನರ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರ ಕೈ ಕಡಿಯಲಾಗಿದೆ. ಒಟ್ಟು 8 ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.&lt;/p&gt;&lt;h2&gt;ಕಾರ ಹುಣ್ಣಿಮೆ: ನರೇಗಲ್ ಗ್ರಾಮದಲ್ಲಿ ನಡೆದಿದ್ದೇನು?&lt;/h2&gt;&lt;p&gt;ಕಾರಹುಣ್ಣಿಮೆ ಅಂಗವಾಗಿ ನರೇಗಲ್ಲ ಗ್ರಾಮದಲ್ಲಿ ಪ್ರತಿ ವರ್ಷದಂತೆ ಸೋಮವಾರವೂ ಹೋರಿ ಓಡಿಸುವ ಕಾರ್ಯಕ್ರಮವಿತ್ತು. ಅದರಂತೆ ಮಧ್ಯಾಹ್ನ ರೈತರು ತಮ್ಮ ಎತ್ತುಗಳನ್ನು ಓಡಿಸುವ ಸಂದರ್ಭದಲ್ಲಿ ಗ್ರಾಮದ ಮಸೀದಿ ಬಳಿ ಪಟಾಕಿ ಸಿಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಾಷಾಸಾಬ ಗೌಂಡಿ ಎಂಬುವರು &lsquo;ನಮ್ಮ ಮಸೀದಿ ಬಳಿ ಏಕೆ ಪಟಾಕಿ ಸಿಡಿಸುತ್ತೀರಾ&rsquo; ಎಂದು ಪ್ರಶ್ನಿಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಹೋರಿ ಹಿಂದೆ ಬಂದಿದ್ದ ಲೋಹಿತ್ ಜಯಪ್ಪ(Lohit Jayappa) ಎಂಬುವರನ್ನು ಅನ್ಯಕೋಮಿನವರು ಥಳಿಸಿದರು. ಇದರಿಂದ ರೊಚ್ಚಿಗೆದ್ದ ಹಿಂದೂ ಯುವಕರ ಗುಂಪು ಕುಡುಗೋಲು ಮತ್ತಿತರ ಆಯುಧಗಳಿಂದ ಪ್ರತಿದಾಳಿ ನಡೆಸಿತು.&lt;/p&gt;&lt;p&gt;ಘರ್ಷಣೆಯಲ್ಲಿ ಶಿವರಾಜ್ ಕುರುಬರ (27), ನಾಗಪ್ಪ ಹನುಮಂತಪ್ಪ ಕುರುಬರ (34), ಮಲ್ಲಪ್ಪ ರಾಯಪ್ಪ ಕೊಡಸಂಗಿ (30), ನಿಂಗರಾಜ ಮಹಾಂತೇಶ ಕುರುಬರ (30), ಜಯಪ್ಪ ಸಂಗಪ್ಪ ಕುರುಬರ (20), ಲೋಹಿತ ರೇವಣಪ್ಪ ಕುರುಬರ (24), ಬಾಷಾಸಾಬ ಗೌಂಡಿ (55), ಖಾಜಾ ಗೌಂಡಿ (18) ಎಂಬುವರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವರಾಜ ಕುರುಬರ, ಜಯಪ್ಪ ಕುರುಬರ ಹಾಗೂ ಲೋಹಿತ ಕುರುಬರ ಅವರನ್ನು ಹುಬ್ಬಳ್ಳಿ ಕಿಮ್ಸ್&zwnj;ಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಕೈ ಕಡಿಯಲಾಗಿದೆ. ಉಳಿದವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.&lt;/p&gt;&lt;p&gt;ಘಟನೆಯಿಂದಾಗಿ ನರೇಗಲ್ಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್&zwnj; ಬಂದೋಬಸ್ತ್&zwnj; ಏರ್ಪಡಿಸಲಾಗಿದೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/clashes-erupt-in-naregal-village-during-kara-hunnnime-bull-racing-competition-at-haveri-district-rav/articleshow-8rvqa08"/>
        </item>
        <item>
            <title><![CDATA[Haveri: ಕ್ಷುಲ್ಲಕ ಜಗಳಕ್ಕೆ ಬಲಿಯಾದ ಬೀದಿ ಬದಿ ವ್ಯಾಪಾರಿ! ಇದು ಒಂದು ಮೊಟ್ಟೆಯ ಕಥೆ!]]></title>
            <link>https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640</link>
            <guid isPermaLink="true">https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640</guid>
            <pubDate>Thu, 02 Jul 2026 17:18:13 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕವಿಚಾರಕ್ಕೆ ಬೀದಿ ಬದಿ ವ್ಯಾಪಾರಿಬ್ಬರು ಕೊಲೆಯಾಗಿದ್ದಾರೆ. ಸುಕಾ ಸುಮ್ಮನೆ ಶುರುವಾದ ಜಗಳ ತಾರಕಕ್ಕೇರಿ, ನಾಲ್ವರು ಯುವಕರು ಹಲ್ಲೆ ನಡೆಸಿದ್ದರಿಂದ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwhact88v2wkd6ajak7ksxj8,imgname-shivaji-1782992759048.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಬೀದಿ-ಬದಿ ವ್ಯಾಪಾರಿ ಮೇಲೆ ಮನಸ್ಸೊಯಿಚ್ಚೆ ಹಲ್ಲೆಮಾಡಿ ಕೊಲೆ ಮಾಡಿರುವ ಘಟನೆ ನಿನ್ನೆ ಸಂಜೆ 7ಕ್ಕೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಹಲ್ಲೆಯ ತೀವ್ರತೆಗೆ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಯಾದ ಕೆಲವೇ ಗಂಟೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್&zwnj;ರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.&lt;/p&gt;&lt;h2&gt;&lt;strong&gt;ಅಷ್ಟಕ್ಕೂ ಆಗಿದ್ದೇನು?&lt;/strong&gt;&lt;/h2&gt;&lt;p&gt;ಮೊಟ್ಟೆ ತರಲು ಬಂದ ವಾಸಿಂ ಎಂಬ ಆರೋಪಿ 100 ರೂ., ನೀಡಿ 5 ಮೊಟ್ಟೆ ಕೇಳಿದ್ದಾನೆ. ನಂತರ 100 ಅಲ್ಲಾ 500 ಕೊಟ್ಟಿದ್ದೇನೆ ಎಂದು ಜಗಳಕ್ಕಿಳಿದಿದ್ದಾನೆ. ಅವನು ಹಾಗೂ ಅವನ ಜತೆ ಇದ್ದ ಮೂವರು ಸೇರಿ ಎದೆಗೆ ಕಾಲಿನಿಂದ ಒದ್ದು ಹಲ್ಲೆಗೈದ ನಾಲ್ವರು ಯುವಕರು ಕೊಲೆಗೈದಿದ್ದಾರೆ. ಶಿವಾಜಿ ರಾವ್&zwnj; ಬೈರೋಜಿ (55) ಮೃತ ವ್ಯಕ್ತಿ.&lt;/p&gt;&lt;h3&gt;&lt;strong&gt;ತಂದೆಗಿಂತ ಮೊದಲು ಮಗನ ಜತೆ ಜಗಳ!&lt;/strong&gt;&lt;/h3&gt;&lt;p&gt;ಈ ಹಿಂದೆ ಹೇಳಿಂದಂತೆ ಮೊಟ್ಟೆ ಖರೀದಿಸಲು ಅಂಗಡಿಗೆ ನಾಲ್ವರು ಮುಸ್ಲಿಂ ಯುವಕರು ಬಂದಿದ್ದಾರೆ. ನಾವು ಕೊಟ್ಟಿದ್ದು ₹500 ಎಂದು ವಾಸೀಮ್ ಜಗಳ ತೆಗೆದಿದ್ದಾನೆ. ಇಲ್ಲ ಕೊಟ್ಟಿದ್ದು ₹100 ಎಂದಿದ್ದಕ್ಕೆ ಮೃತ ಶಿವಾಜಿರಾವ್ ಮಗನ ಜೊತೆ ಗಲಾಟೆ ಮಾಡಿದ್ದರು. ಮಗನ ಜೊತೆ ಗಲಾಟೆ ಬಿಡಿಸಲು ಬಂದಾಗ ತಂದೆ ಮೇಲೆ ಆ ಯುವಕರು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ವಾಸೀಮ್ ಮುಲ್ಲಾ,ಸರ್ಪರಾಜ್ ಮುಲ್ಲಾ,ಸಾದಿಕ್ ಮುಲ್ಲಾ ಹಾಗೂ ಶಿರಾಜ್ ಮುಲ್ಲಾ ಆರೋಪಿಗಳಾಗಿದ್ದಾರೆ.&lt;/p&gt;&lt;h3&gt;&lt;strong&gt;ಘಟನೆ ಬಳಿಕ ಆಗಿದ್ದೇನು?&lt;/strong&gt;&lt;/h3&gt;&lt;p&gt;ಶಿವಾಜಿರಾವ್ ಮೃತದೇಹವನ್ನು ಮರೋಣತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಘಟನೆ ಬಗ್ಗೆ ಶಿವಾಜಿರಾವ್ ಮಗ ಭರತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಐಜಿ ರವಿಕಾಂತೇಗೌಡ ಹಾಗೂ ಎಸ್ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಸಧ್ಯ ಈ ಘಟನೆಯಿಂದಾಗಿ ರಟ್ಟಿಹಳ್ಳಿ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿದೆ. ಸಧ್ಯಕ್ಕೆ ರಟ್ಟಿಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.&lt;/p&gt;&lt;h3&gt;&lt;strong&gt;ಘಟನೆ ಕುರಿತು ಎಸ್&zwnj;ಪಿ ಹೇಳಿದ್ದೇನು?&lt;/strong&gt;&lt;/h3&gt;&lt;p&gt;ಘಟನೆ ಕುರಿತು ಮಾತನಾಡಿದ ಹಾವೇರಿ ಎಸ್ ಪಿ ಯಶೋಧಾ ವಂಟಗೋಡಿ, ಈ ಪ್ರಕರಣದಲ್ಲಿ ನಾಲ್ವರ ಮೇಲೆ ಕಂಪ್ಲೇಂಟ್ ಆಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾ. ಅವನನ್ನೂ ಕೂಡಾ ಬಂಧಿಸುತ್ತೇವೆ ಎಂದು ಖಡಕ್&zwnj; ಮಾತನ್ನು ಆಡಿದ್ದಾರೆ. ಆರೋಪಿಗಳಾದ ವಾಸಿಂ, ಸರ್ಪರಾಜ್, ಸಾಧಿಕ್ ಬಂಧಿಸಲಾಗಿದೆ. ಸಿರಾಜ್ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.&lt;/p&gt;&lt;h3&gt;&lt;strong&gt;ಗೂಡಂಗಡಿ ಇಟ್ಟುಕೊಂಡಿದ್ದ ಶಿವಾಜಿರಾವ್&zwnj;!&lt;/strong&gt;&lt;/h3&gt;&lt;p&gt;ಮೃತ ಶಿವಾಜಿ ರಾವ್ ಗೂಡಂಗಡಿ ಇಟ್ಟುಕೊಂಡು ಜೀವನ ಸಾಗಿಸಿದ್ದರು.ಈ ವೇಳೆ ಗಲಾಟೆ ಆಗಿ ತಳ್ಳಾಟ ಆಗಿದೆ. ಈ ಹಿನ್ನೆಲೆಯಲ್ಲಿ ಗಲಾಟೆ ವೇಳೆ ಶಿವಾಜಿ ರಾವ್ ತಳ್ಳಿದ್ದಕ್ಕೆ ಕೆಳಗೆ ಬಿದ್ದಿದಾರೆ. ಶಿವಾಜಿ ರಾವ್ ಸ್ಥಳದಲ್ಲೇ ಅನ್ ಕಾನ್ಸಿಯಸ್ ಆಗಿದ್ದಾರೆ. ಮುಂದೆ ಆಸ್ಪತ್ರೆಗೆ ದಾಖಲಿಸಿದಾಗ ಅವರು ಮೃತ ಪಟ್ಟಿರೋದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.&lt;/p&gt;&lt;h3&gt;&lt;strong&gt;ಎಲ್ಲರೂ ಆಪ್ತರೇ ಆಗಿದ್ರಾ?&lt;/strong&gt;&lt;/h3&gt;&lt;p&gt;ನಾಲ್ವರು ಆರೋಪಿಗಳು ಸ್ವಂತ ಅಣ್ಣ ತಮ್ಮಂದಿರಾಗಿದ್ದಾರೆ. ಆರೋಪಿಗಳ ಅಪ್ಪ ಹಾಗೂ ಮೃತ ಪಟ್ಟ ಶಿವಾಜಿ ರಾವ್ ಇಬ್ಬರೂ &zwnj;ಪರಸ್ಪರ ಗೊತ್ತಿರೋರೇ ಆಗಿದ್ದಾರೆ. ತಳ್ಳಾಟದಲ್ಲಿ ಈ ತರ ಡೆತ್ ಆಗಿದೆ, ಇದು ಕಮ್ಯುನಲ್ ಅಟೆಂಪ್ಟ್&zwnj; ಅಲ್ಲ ಎನ್ನುವುದು ಪೊಲೀಸ್&zwnj; ಮೂಲಗಳಿಂದ ತಿಳಿದು ಬಂದಿದೆ. ಮೃತ ಶಿವಾಜಿ ರಾವ್ ದೇಹದ ಮೇಲೆ ಮೇಲ್ಮೋಟಕ್ಕೆ ಎಲ್ಲೂ ಗಾಯಗಳಿಲ್ಲ ಅಂತ ಮಾಹಿತಿ ಇದೆ. ಪಿಎಂ ವರದಿ ಬಂದ ಮೇಲೆ ಎನಾಗಿದೆ ಎಂದು ಗೊತ್ತಾಗಲಿದೆ. ಪೊಲೀಸ್&zwnj;ರು ತನಿಖೆ ಮುಂದುವರೆಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/haveri-a-street-vendor-who-fell-victim-to-a-trivial-fight-this-is-the-story-of-an-egg/articleshow-9egt640"/>
        </item>
        <item>
            <title><![CDATA[ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ  ವೈದ್ಯರಿಲ್ಲ, ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವು! ರೊಚ್ಚಿಗೆದ್ದ ಕುಟುಂಬ]]></title>
            <link>https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z</link>
            <guid isPermaLink="true">https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z</guid>
            <pubDate>Fri, 10 Jul 2026 13:02:14 +0530</pubDate>
            <description><![CDATA[ಹಾವೇರಿ ತಾಲ್ಲೂಕಿನ ಹಾವನೂರು ಗ್ರಾಮದಲ್ಲಿ, ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೆ ಒಂದು ವರ್ಷದ ಹೆಣ್ಣು ಮಗು ಸಾವನ್ನಪ್ಪಿದೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಆಸ್ಪತ್ರೆಯ ಮುಂದೆ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ವೈದ್ಯರ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx5ev9k9fp859rdrb9dxqgm3,imgname-haveri-government-hospital-negligence-1783668516456.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಸರ್ಕಾರಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೈದ್ಯರು ಸಿಗದೆ, ಸೂಕ್ತ ಚಿಕಿತ್ಸೆ ಲಭಿಸದೇ ಕೇವಲ ಒಂದು ವರ್ಷದ ಹೆಣ್ಣು ಮಗುವೊಂದು ಪ್ರಾಣ ಕಳೆದುಕೊಂಡಿರುವ ಕರುಳು ಹಿಂಡುವ ಘಟನೆ ಹಾವೇರಿ ತಾಲ್ಲೂಕಿನ ಹಾವನೂರು ಗ್ರಾಮದಲ್ಲಿ ನಡೆದಿದೆ. ಭವಾನಿ ಮಹೇಶ ಕಿಳ್ಳಿಕ್ಯಾತರ್ (1 ವರ್ಷ) ಮೃತಪಟ್ಟ ದುರ್ದೈವಿ ಮಗುವಾಗಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆಯ ಮುಂದೆಯೇ ಮಗುವಿನ ಶವವನ್ನಿಟ್ಟು ತೀವ್ರ ಪ್ರತಿಭಟನೆ ನಡೆಸಿದ್ದಾರೆ.&lt;/p&gt;&lt;h2&gt;ಆಟವಾಡುತ್ತಿದ್ದ ಮಗು ಏಕಾಏಕಿ ಮೂರ್ಛೆ ಹೋಗಿತ್ತು:&lt;/h2&gt;&lt;p&gt;ಮಗು ಭವಾನಿ ಮನೆಯಲ್ಲಿ ಎಂದಿನಂತೆ ನಗುನಗುತ್ತಾ ಆಟವಾಡುತ್ತಿತ್ತು. ಆದರೆ ಆಟವಾಡುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಮಗು ಪ್ರಜ್ಞೆ ತಪ್ಪಿ ಮೂರ್ಛೆ ಹೋಗಿದೆ. ಇದರಿಂದ ತೀವ್ರ ಆತಂಕಗೊಂಡ ಪೋಷಕರು ತಕ್ಷಣವೇ ಮಗುವನ್ನು ಉಪಚರಿಸಲು ಹಾವನೂರು ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.&lt;/p&gt;&lt;h2&gt;ಆಸ್ಪತ್ರೆಯಲ್ಲಿ ಇರಲಿಲ್ಲ ವೈದ್ಯರು&lt;/h2&gt;&lt;p&gt;ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಅಲ್ಲಿ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರಲಿಲ್ಲ ಎನ್ನಲಾಗಿದೆ. ಮಗುವಿನ ಸ್ಥಿತಿ ಗಂಭೀರವಾಗಿದ್ದರೂ ತುರ್ತು ಚಿಕಿತ್ಸೆ ನೀಡಲು ವೈದ್ಯರಿಲ್ಲದ ಕಾರಣ ಪೋಷಕರು ಅಸಹಾಯಕರಾಗಿ ಕಣ್ಣೀರು ಹಾಕಿದ್ದಾರೆ. ಅಲ್ಲಿ ಯಾವುದೇ ಸಕಾಲಿಕ ವೈದ್ಯಕೀಯ ನೆರವು ಸಿಗದ ಹಿನ್ನೆಲೆಯಲ್ಲಿ, ಅನಿವಾರ್ಯವಾಗಿ ಹಾವನೂರಿನ ಪಕ್ಕದ ಪಟ್ಟಣವಾದ ಗುತ್ತಲದ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲು ನಿರ್ಧರಿಸಿದ್ದಾರೆ. ಆದರೆ, ದುರದೃಷ್ಟವಶಾತ್ ಹಾವನೂರಿನಿಂದ ಗುತ್ತಲ ಪಟ್ಟಣದ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಮಗು ಜೀವ ಕಳೆದುಕೊಂಡಿದೆ. ಸಕಾಲಕ್ಕೆ ಹಾವನೂರು ಆಸ್ಪತ್ರೆಯಲ್ಲೇ ಚಿಕಿತ್ಸೆ ಸಿಕ್ಕಿದ್ದರೆ ನಮ್ಮ ಮಗು ಬದುಕುತ್ತಿತ್ತು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.&lt;/p&gt;&lt;h2&gt;ಶವವಿಟ್ಟು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ:&lt;/h2&gt;&lt;p&gt;ವೈದ್ಯರ ಬೇಜವಾಬ್ದಾರಿತನ ಹಾಗೂ ಆಸ್ಪತ್ರೆಯ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ರೊಚ್ಚಿಗೆದ್ದ ಪೋಷಕರು, ಸಂಬಂಧಿಕರು ಹಾಗೂ ಗ್ರಾಮಸ್ಥರು ಮಗುವಿನ ಶವವನ್ನು ಹಾವನೂರು ಸರ್ಕಾರಿ ಆಸ್ಪತ್ರೆಯ ಮುಂದೆಯೇ ಇಟ್ಟು ಧರಣಿ ಕುಳಿತರು. ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಗೈರುಹಾಜರಿಯಿಂದಾಗಿ ಬಡವರ ಜೀವಗಳು ಬಲಿಯಾಗುತ್ತಿವೆ ಎಂದು ಸಾರ್ವಜನಿಕರು ಆಸಮಾಧಾನ ವ್ಯಕ್ತಪಡಿಸಿದರು.&lt;/p&gt;&lt;h2&gt;ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿ ಭೇಟಿ:&lt;/h2&gt;&lt;p&gt;ಪ್ರತಿಭಟನೆಯ ವಿಷಯ ತಿಳಿಯುತ್ತಿದ್ದಂತೆ ಹಾವೇರಿ ತಾಲ್ಲೂಕು ವೈದ್ಯಾಧಿಕಾರಿ (ಟಿ.ಎಚ್.ಒ) ಡಾ. ಪ್ರಭಾಕರ್ ಕುಂದೂರ ಅವರು ತಕ್ಷಣ ಹಾವನೂರು ಆಸ್ಪತ್ರೆಗೆ ಭೇಟಿ ನೀಡಿದರು. ಸ್ಥಳದಲ್ಲಿದ್ದ ಉದ್ರಿಕ್ತ ಜನರನ್ನು ಮಾತುಕತೆ ನಡೆಸಿ ಮಗುವಿನ ಕುಟುಂಬ ಸದಸ್ಯರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ವೇಳೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಮುಗಿಬಿದ್ದು, ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದರು.&lt;/p&gt;&lt;h2&gt;ಪೊಲೀಸ್ ಪ್ರಕರಣ ದಾಖಲು:&lt;/h2&gt;&lt;p&gt;ಘಟನೆಗೆ ಸಂಬಂಧಿಸಿದಂತೆ ಸದ್ಯ ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಮುಂದಿನ ತನಿಖೆ ಪ್ರಗತಿಯಲ್ಲಿದೆ.&lt;/p&gt;]]></content:encoded>
            <category>haveri</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/one-year-old-girl-dies-due-to-absence-of-doctor-protests-outside-haveri-government-hospital-gdp/articleshow-9g4o32z"/>
        </item>
        <item>
            <title><![CDATA[‘ಸಮಯ ಬಂದಾಗ ಎಲ್ಲ ಹೇಳುವೆ’: ಸಚಿವ ಸ್ಥಾನ ತಪ್ಪಿದ್ದಕ್ಕೆ ಫುಲ್ ಸ್ಟೋರಿ ಬಿಚ್ಚಿಟ್ಟ ಬಸವರಾಜ ಶಿವಣ್ಣವರ]]></title>
            <link>https://kannada.asianetnews.com/karnataka-districts/basavaraj-shivannavar-claims-new-name-came-from-high-command-at-last-moment-gvd/articleshow-ayxickc</link>
            <guid isPermaLink="true">https://kannada.asianetnews.com/karnataka-districts/basavaraj-shivannavar-claims-new-name-came-from-high-command-at-last-moment-gvd/articleshow-ayxickc</guid>
            <pubDate>Thu, 06 Aug 2026 18:32:12 +0530</pubDate>
            <description><![CDATA[&lt;p&gt;ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಆಕಾಂಕ್ಷಿಗಳ ಅಸಮಾಧಾನ ಮುಂದುವರಿದಿದೆ. ಈ ನಡುವೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ಅವರು ಸಚಿವ ಸ್ಥಾನ ಕೈತಪ್ಪಿದ ಬೆಳವಣಿಗೆಗಳ..&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kzbjmxhxydvqj4cbes7q7zga,imgname-bj-1786021312061.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಆ.06):&lt;/strong&gt; ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ವಂಚಿತ ಆಕಾಂಕ್ಷಿಗಳ ಅಸಮಾಧಾನ ಮುಂದುವರಿದಿದೆ. ಈ ನಡುವೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ಅವರು ಸಚಿವ ಸ್ಥಾನ ಕೈತಪ್ಪಿದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಕೊನೆಯ ಕ್ಷಣದಲ್ಲಿ ತಮ್ಮ ಹೆಸರು ಸಚಿವರ ಪಟ್ಟಿಯಿಂದ ಕೈಬಿಟ್ಟು, ಹೈಕಮಾಂಡ್&zwnj;ನಿಂದ ಹೊಸ ಹೆಸರು ಬಂದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ &lsquo;ಗಾಡ್&zwnj;ಫಾದರ್&rsquo; ಎಂದು ಹೇಳಿರುವ ಶಿವಣ್ಣವರ, ಉತ್ತರ ಕರ್ನಾಟಕದ ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ತಮ್ಮ ಹೆಸರೇ ಪರಿಗಣನೆಯಲ್ಲಿತ್ತು ಎಂದು ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;&lsquo;ಕೊನೆ ತನಕ ನನ್ನ ಹೆಸರೇ ಇತ್ತು&rsquo;&lt;/strong&gt;&lt;/p&gt;&lt;p&gt;ಶಿವಣ್ಣವರ ಅವರ ಪ್ರಕಾರ, ಸಚಿವ ಸ್ಥಾನಕ್ಕೆ ತಮ್ಮ ಹೆಸರು ಕೊನೆಯ ಹಂತದವರೆಗೂ ಇತ್ತು. ಉತ್ತರ ಕರ್ನಾಟಕದ ಭಾಗದಿಂದ ತಮ್ಮನ್ನು ಸಚಿವರನ್ನಾಗಿ ಮಾಡಬೇಕು ಎಂಬ ಅಭಿಪ್ರಾಯವೂ ಇತ್ತು. ಆದರೆ ಅಂತಿಮ ಕ್ಷಣದಲ್ಲಿ ಬೆಳವಣಿಗೆ ಬದಲಾಗಿದೆ. &lsquo;ಕೊನೆ ಘಳಿಗೆಯವರೆಗೂ ನನ್ನ ಹೆಸರೇ ಇತ್ತು. ಆದರೆ ಕೊನೆಯ ಹಂತದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಇಲ್ಲದೆ, ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ಇಲ್ಲದೆ ಹೊಸ ಹೆಸರು ಪಟ್ಟಿಯಲ್ಲಿ ಬಂತು. ಆ ಹೆಸರು ಹೈಕಮಾಂಡ್&zwnj;ನಿಂದ ಬಂದಿತ್ತು&rsquo; ಎಂದು ಶಿವಣ್ಣವರ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳಾ ಕೋಟಾದಡಿ ಮತ್ತೊಬ್ಬರಿಗೆ ಸಚಿವ ಸ್ಥಾನ ನೀಡುವ ಪ್ರಕ್ರಿಯೆಯೂ ನಡೆದಿತ್ತು ಎಂದು ಅವರು ತಿಳಿಸಿದ್ದಾರೆ. ಆದರೆ ಕೊನೆಗೆ ಸಿದ್ದರಾಮಯ್ಯ ಅವರು ಆ ಮಹಿಳಾ ಆಕಾಂಕ್ಷಿಗೆ ಪ್ರಮಾಣ ವಚನ ಸ್ವೀಕರಿಸದಂತೆ ಸೂಚಿಸಿದ್ದರು. ಪರಿಣಾಮವಾಗಿ ಅವರು ಪ್ರಮಾಣ ವಚನ ಸ್ವೀಕರಿಸಿಲ್ಲ ಎಂದು ಶಿವಣ್ಣವರ ಹೇಳಿದ್ದಾರೆ.&lt;/p&gt;&lt;p&gt;&lt;strong&gt;&lsquo;ನನಗೆ ಇನ್ನೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ&rsquo;&lt;/strong&gt;&lt;/p&gt;&lt;p&gt;ತಮಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇನ್ನೂ ಇದೆ ಎಂದು ಬಸವರಾಜ ಶಿವಣ್ಣವರ ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ತಮ್ಮ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ. &lsquo;ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸ ಇನ್ನೂ ಇದೆ. ಒಬ್ಬ ಮಹಿಳೆಗೆ ಸಚಿವ ಸ್ಥಾನ ನೀಡಲೇಬೇಕು ಎಂಬ ವಿಚಾರವೂ ಇದೆ. ಮುಂದಿನ ದಿನಗಳಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಆಶಾಭಾವನೆ ಇದೆ&rsquo; ಎಂದು ಹೇಳಿದ್ದಾರೆ. ಆದರೆ ಬೇರೆ ಯಾವುದೇ ನಾಮನಿರ್ದೇಶಿತ ಹುದ್ದೆ ನೀಡಿದರೂ ಸ್ವೀಕರಿಸುವುದಿಲ್ಲ ಎಂಬುದನ್ನೂ ಶಿವಣ್ಣವರ ಸ್ಪಷ್ಟವಾಗಿ ತಿಳಿಸಿದ್ದಾರೆ. &lsquo;ನನಗೆ ಬೇರೆ ಹುದ್ದೆ ಕೊಟ್ಟರೆ ತೆಗೆದುಕೊಳ್ಳುವುದಿಲ್ಲ. ಶಾಸಕನಾಗಿಯೇ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತೇನೆ&rsquo; ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;&lt;strong&gt;ಅರಣ್ಯ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದ ಶಿವಣ್ಣವರ&lt;/strong&gt;&lt;/p&gt;&lt;p&gt;ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅರಣ್ಯ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು ಶಿವಣ್ಣವರ ಬಹಿರಂಗಪಡಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯ ಅವರ ಬಳಿ ತೆಗೆದುಕೊಂಡು ಹೋಗಿದ್ದೆ. ಆದರೆ ಮುಖ್ಯಮಂತ್ರಿ ರಾಜೀನಾಮೆ ನೀಡದಂತೆ ತಡೆದು, ಕ್ಷೇತ್ರದಲ್ಲಿ ಕೆಲಸ ಮುಂದುವರಿಸುವಂತೆ ಸೂಚಿಸಿದ್ದರು ಎಂದು ಅವರು ಹೇಳಿದ್ದಾರೆ. &lsquo;ರಾಜೀನಾಮೆ ನೀಡಬೇಡ, ತಡೆದುಕೋ. ಕ್ಷೇತ್ರದಲ್ಲಿ ಕೆಲಸ ಮಾಡು. ಮುಂದೆ ಏನು ಒಳ್ಳೆಯದು ಮಾಡಬೇಕೋ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು&rsquo; ಎಂದು ಶಿವಣ್ಣವರ ತಿಳಿಸಿದ್ದಾರೆ.&lt;/p&gt;&lt;p&gt;&lt;strong&gt;&lsquo;ಆ ಹೆಸರು ರಾಹುಲ್ ಗಾಂಧಿಗೂ ಗೊತ್ತಿರಲಿಲ್ಲ&rsquo;&lt;/strong&gt;&lt;/p&gt;&lt;p&gt;ಮಹಿಳಾ ಕೋಟಾದಡಿ ಕೇಳಿಬಂದ ಗಾಯತ್ರಿ ಶಾಂತೇಗೌಡ ಅವರ ಹೆಸರಿನ ಬಗ್ಗೆಯೂ ಶಿವಣ್ಣವರ ಮಹತ್ವದ ಹೇಳಿಕೆ ನೀಡಿದ್ದಾರೆ. ಆ ಹೆಸರು ರಾಹುಲ್ ಗಾಂಧಿ ಅವರಿಗೂ ತಿಳಿದಿರಲಿಲ್ಲ. ಕೆ.ಸಿ. ವೇಣುಗೋಪಾಲ್ ಅಥವಾ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಕಡೆಯಿಂದ ಬಂದ ಹೆಸರು ಎಂದು ಶಿವಣ್ಣವರ ಆರೋಪಿಸಿದ್ದಾರೆ. ಆದರೆ ಸಚಿವ ಸ್ಥಾನ ತಮ್ಮ ಕೈತಪ್ಪಿದ ಸಂಪೂರ್ಣ ಪ್ರಕ್ರಿಯೆಯನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದು ಹೇಳಿರುವ ಅವರು, ಸೂಕ್ತ ಸಮಯ ಬಂದಾಗ ಎಲ್ಲವನ್ನೂ ಹೇಳುವುದಾಗಿ ತಿಳಿಸಿದ್ದಾರೆ. &lsquo;ಸಂಪೂರ್ಣ ಪ್ರಕ್ರಿಯೆ ಮುಗಿದ ಮೇಲೆ ನನಗೆ ಸಚಿವ ಸ್ಥಾನ ಹೇಗೆ ತಪ್ಪಿತು ಎಂಬುದನ್ನು ಹೇಳುತ್ತೇನೆ. ಹೇಗೆ ತಪ್ಪಿಸಲಾಯಿತು, ಅದರಲ್ಲಿ ಜಿಲ್ಲೆಯವರ ಪಾತ್ರವಿದೆಯೋ ಅಥವಾ ಹೊರಗಿನವರ ಪಾತ್ರವಿದೆಯೋ ಆಗ ಗೊತ್ತಾಗುತ್ತದೆ&rsquo; ಎಂದು ಶಿವಣ್ಣವರ ಹೇಳಿದ್ದಾರೆ.&lt;/p&gt;&lt;h2&gt;&lt;strong&gt;ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಖುಷಿಯಿದೆ&lt;/strong&gt;&lt;/h2&gt;&lt;p&gt;ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಸಂತೋಷವಿದೆ ಎಂದಿರುವ ಶಿವಣ್ಣವರ, ತಮ್ಮ ವಿಚಾರವನ್ನು ಅವರೊಂದಿಗೆ ಹೋಲಿಕೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. &lsquo;ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಖುಷಿಯಿದೆ. ಅವರದ್ದೇ ಬೇರೆ, ನಮ್ಮದೇ ಬೇರೆ. ಲಂಬಾಣಿ ಸಮಾಜದಿಂದ ಒಬ್ಬರೇ ಶಾಸಕರಿರುವ ಕಾರಣ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ&rsquo; ಎಂದು ಶಿವಣ್ಣವರ ಹೇಳಿದ್ದಾರೆ. ತಾವು ಯಾರ ವಿರುದ್ಧವೂ ದೂರು ನೀಡಿಲ್ಲ ಎಂದಿರುವ ಅವರು, ತಮ್ಮ ವಿರುದ್ಧ ಯಾರು ದೂರು ನೀಡಿದ್ದಾರೆ ಎಂಬುದನ್ನು ಮಾತ್ರ ಸೂಕ್ತ ಸಂದರ್ಭ ಬಂದಾಗ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.&lt;/p&gt;&lt;p&gt;&lsquo;ನಾನು ಯಾರ ಮೇಲೂ ಕಂಪ್ಲೇಂಟ್ ಮಾಡಿಲ್ಲ. ಆದರೆ ನನ್ನ ಮೇಲೆ ಯಾರು ಕಂಪ್ಲೇಂಟ್ ಮಾಡಿದ್ದಾರೆ ಎಂಬುದನ್ನು ಸಂದರ್ಭ ಬಂದಾಗ ಹೇಳುತ್ತೇನೆ&rsquo; ಎಂದು ಬಸವರಾಜ ಶಿವಣ್ಣವರ ಹೇಳಿದ್ದಾರೆ. ಶಿವಣ್ಣವರ ಅವರ ಈ ಹೇಳಿಕೆಗಳು ಸಚಿವ ಸಂಪುಟ ವಿಸ್ತರಣೆಯ ಒಳಗಿನ ರಾಜಕೀಯ ಲೆಕ್ಕಾಚಾರಗಳ ಬಗ್ಗೆ ಮತ್ತೊಮ್ಮೆ ಚರ್ಚೆ ಹುಟ್ಟುಹಾಕಿದ್ದು, ಮುಂದಿನ ದಿನಗಳಲ್ಲಿ ಅವರು ಬಹಿರಂಗಪಡಿಸಲಿರುವ &lsquo;ಸಚಿವ ಸ್ಥಾನ ಹೇಗೆ ತಪ್ಪಿತು&rsquo; ಎಂಬ ಮಾಹಿತಿಯತ್ತ ಇದೀಗ ರಾಜಕೀಯ ವಲಯದ ಗಮನ ನೆಟ್ಟಿದೆ.&lt;/p&gt;]]></content:encoded>
            <category>haveri</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/basavaraj-shivannavar-claims-new-name-came-from-high-command-at-last-moment-gvd/articleshow-ayxickc"/>
        </item>
        <item>
            <title><![CDATA[ಸರ್ಕಾರಿ ಪ್ರೌಢಶಾಲೆ ₹5 ಲಕ್ಷ ಮೌಲ್ಯದ ಮೇಲ್ಚಾವಣಿ ತಗಡು ₹20 ಸಾವಿರಕ್ಕೆ ಮಾರಿದ ಶಿಕ್ಷಕ! ಹಳೆ ವಿದ್ಯಾರ್ಥಿ ಆರೋಪ]]></title>
            <link>https://kannada.asianetnews.com/karnataka-districts/haveri-marol-govt-high-school-teacher-caught-selling-roof-sheets-illegally-allegation/articleshow-cfyqq3x</link>
            <guid isPermaLink="true">https://kannada.asianetnews.com/karnataka-districts/haveri-marol-govt-high-school-teacher-caught-selling-roof-sheets-illegally-allegation/articleshow-cfyqq3x</guid>
            <pubDate>Tue, 28 Jul 2026 10:33:53 +0530</pubDate>
            <description><![CDATA[&lt;p&gt;ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರೊಬ್ಬರು, ಶಾಲೆಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ತಗಡುಗಳನ್ನು ಕೇವಲ 20 ಸಾವಿರ ರೂಪಾಯಿಗೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಈ ಕೃತ್ಯವನ್ನು ಹಳೆಯ ವಿದ್ಯಾರ್ಥಿಯೊಬ್ಬರು ವೀಡಿಯೋ ಮಾಡಿ ಬಯಲಿಗೆಳೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kykhkmvpcmgverk4cjy6wat4,imgname-haveri-govt-school-roof-sheets-selling-1785214915446.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜು.28): 'ಬೇ&lt;/strong&gt;ಲಿಯೇ ಎದ್ದು ಹೊಲ ಮೇಯ್ದರೆ (Fence eating the crop)' ಎಂಬ ಗಾದೆ ಮಾತು ಹಾವೇರಿ ಜಿಲ್ಲೆಯಲ್ಲಿ ಅಕ್ಷರಶಃ ನಿಜವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ನೀತಿಪಾಠ ಹೇಳಿಕೊಡಬೇಕಾದ ಗುರುವೇ, ತಾನು ಪಾಠ ಮಾಡುವ ಶಾಲೆಯ ಆಸ್ತಿಯನ್ನೇ ಕದ್ದು ಮಾರಾಟ ಮಾಡಿ ಸಿಕ್ಕಿಬಿದ್ದಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ (Marol High School) ನಡೆದಿದೆ. ಶಾಲೆಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ಕೇವಲ ಕ್ಷುಲ್ಲಕ ಹಣಕ್ಕೆ ಮಾರಿಕೊಂಡ ಶಿಕ್ಷಕನ ಕೃತ್ಯ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಏನಿದು ಘಟನೆ? ಅಕ್ರಮ ನಡೆದಿದ್ದು ಹೇಗೆ?&lt;/strong&gt;&lt;/h2&gt;&lt;p&gt;ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ (Heavy Rain and Wind) ಮರೋಳ ಪ್ರೌಢಶಾಲೆಯ ಮೇಲ್ಚಾವಣಿ (Roofing sheets) ಸಂಪೂರ್ಣವಾಗಿ ಹಾರಿಹೋಗಿತ್ತು. ಶಾಲೆಯ ಸುಮಾರು 120ಕ್ಕೂ ಹೆಚ್ಚು ಕಬ್ಬಿಣದ ತಗಡುಗಳು ಹಾಗೂ ಪಟ್ಟಿಗಳು ಗಾಳಿಗೆ ಕಿತ್ತುಬಂದಿದ್ದವು. ಈ ಎಲ್ಲಾ ಸಾಮಗ್ರಿಗಳನ್ನು ಶಾಲೆಯ ಆವರಣದಲ್ಲೇ ಸುರಕ್ಷಿತವಾಗಿ ಎತ್ತಿಡಲಾಗಿತ್ತು. ಇದರ ಒಟ್ಟು ಮೌಲ್ಯ ಸುಮಾರು 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.&lt;/p&gt;&lt;p&gt;ಆದರೆ, ಈ ಶಾಲೆಯ ಮುಖ್ಯೋಪಾಧ್ಯಾಯರ (Head Master) ಆರೋಗ್ಯ ಸರಿಯಿಲ್ಲದ ಕಾರಣ ಅವರು ರಜೆಯಲ್ಲಿದ್ದರು. ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡ ಶಾಲೆಯ ಹಿರಿಯ ಶಿಕ್ಷಕ ಪ್ರಭು ಕೆ.ಎಂ. (Prabhu K.M.), ಶಾಲೆಯ ಪ್ರಭಾರಿ (In-charge) ಉಸ್ತುವಾರಿ ವಹಿಸಿಕೊಂಡಿದ್ದರು. ಶಾಲೆಯ ಆಡಳಿತ ಮಂಡಳಿಯಿಂದ ಅಥವಾ ಎಸ್&zwnj;ಡಿಎಂಸಿಯಿಂದ (SDMC) ಯಾವುದೇ ಅಧಿಕೃತ ಠರಾವು (Resolution) ಪಾಸ್ ಮಾಡದೇ, ಪ್ರಭು ಅವರು ಈ ₹5 ಲಕ್ಷ ಮೌಲ್ಯದ ತಗಡುಗಳನ್ನು ಗ್ರಾಮದ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಲು ಸಂಚು ರೂಪಿಸಿದ್ದರು.&lt;/p&gt;&lt;h2&gt;&lt;strong&gt;₹20 ಸಾವಿರಕ್ಕೆ ಡೀಲ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕ!&lt;/strong&gt;&lt;/h2&gt;&lt;p&gt;ಶಿಕ್ಷಕ ಪ್ರಭು ಕೆ.ಎಂ., ಶಾಲೆಯ ತಗಡುಗಳನ್ನು ಗ್ರಾಮದ ಮಂಜುನಾಥ್ ಮಾಗಡಿ, ಮಾಲತೇಶ್ ಓಲೆಕಾರ, ಹನುಮಪ್ಪ ಈಟಿ ಹಾಗೂ ನಾಗಪ್ಪ ಮಡಿವಾಳರ ಎಂಬ ಖಾಸಗಿ ವ್ಯಕ್ತಿಗಳಿಗೆ ಕೇವಲ 20 ಸಾವಿರ ರೂಪಾಯಿಗೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದರು. ಹಣ ಕೈ ಬದಲಾವಣೆಯಾಗುವ ಸಂದರ್ಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ (Alumni) ಮನೋಜ್ ದೇವಸೂರು ಎಂಬುವರು ತಮ್ಮ ಮೊಬೈಲ್&zwnj;ನಲ್ಲಿ ಸಂಪೂರ್ಣ ದೃಶ್ಯವನ್ನು ವಿಡಿಯೋ ಚಿತ್ರೀಕರಣ (Video Recording) ಮಾಡಿದ್ದಾರೆ. ಶಿಕ್ಷಕ ಪ್ರಭು ₹20,000 ನಗದು ಹಣ ಪಡೆಯುವಾಗ ರೆಡ್ ಹ್ಯಾಂಡ್ (Red Handed) ಆಗಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.&lt;/p&gt;&lt;h3&gt;&lt;strong&gt;ಡಿಸಿ, ಸಿಇಒ ಕಚೇರಿ ಅಲೆದರೂ ಸಿಗದ ನ್ಯಾಯ: 'ಡೋಂಟ್ ಕೇರ್' ಎಂದ ಅಧಿಕಾರಿಗಳು!&lt;/strong&gt;&lt;/h3&gt;&lt;p&gt;ತಮ್ಮ ಶಾಲೆಯ ಆಸ್ತಿಗೆ ಕನ್ನ ಹಾಕಿದ ಶಿಕ್ಷಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಸಾಕ್ಷಿ ಸಮೇತ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಶ್ರೀನಿವಾಸ್ ಅವರಿಗೆ ದೂರು ನೀಡಿದ್ದಾರೆ. ಆದರೆ, ಬಿಇಒ ದೂರಿಗೆ ಕನಿಷ್ಠ ಬೆಲೆಯನ್ನೂ ನೀಡದೆ 'ಡೋಂಟ್ ಕೇರ್' (Don't Care) ಧೋರಣೆ ತಳೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.&lt;/p&gt;&lt;p&gt;ಇಷ್ಟಕ್ಕೇ ಸುಮ್ಮನಾಗದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಹಾವೇರಿ ಜಿಲ್ಲಾಧಿಕಾರಿ ಕಚೇರಿ (Haveri DC Office), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ZP CEO) ಹಾಗೂ ಡಿಡಿಪಿಐ (DDPI) ಅವರಿಗೆ ಸಾಕ್ಷ್ಯಾಧಾರಗಳ ಸಮೇತ ಮನವಿ ಸಲ್ಲಿಸಿದ್ದಾರೆ. ಆದಾಗ್ಯೂ, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಅಕ್ರಮ ಎಸಗಿದ ಶಿಕ್ಷಕನಿಗೆ ಸಾಥ್ ನೀಡುತ್ತಿದ್ದು, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ಸಾರ್ವಜನಿಕರ ಆಕ್ರೋಶ:&lt;/strong&gt;&lt;/h2&gt;&lt;p&gt;'ನಾವು ಓದಿದ ಶಾಲೆಗೆ ಅನ್ಯಾಯವಾದಾಗ ನ್ಯಾಯ ಕೇಳಲು ಜಿಲ್ಲಾಧಿಕಾರಿಗಳ ಕಚೇರಿ ಅಲೆದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ' ಎಂದು ಶಾಲೆಯ ಹಳೆಯ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಲೆಯ ಸ್ವತ್ತನ್ನು ಕದ್ದ ಮಾರಿದ ಶಿಕ್ಷಕ ಪ್ರಭು ಕೆ.ಎಂ. ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು (Suspension) ಹಾಗೂ ಈ ಅಕ್ರಮಕ್ಕೆ ಸಾಥ್ ನೀಡುತ್ತಿರುವ ಶಿಕ್ಷಣಾಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/haveri-marol-govt-high-school-teacher-caught-selling-roof-sheets-illegally-allegation/articleshow-cfyqq3x"/>
        </item>
        <item>
            <title><![CDATA[ಸರ್ಕಾರದ ₹5 ಕೋಟಿ ಕಳಪೆ ಕಾಮಗಾರಿ; ರಾಜಕಾಲುವೆ ಮುಂದೆ ಕಟ್ಟಿಕೊಂಡು ಹೋಗ್ತಿದ್ದರೆ, ಹಿಂದೆ ಬಿದ್ದುಕೊಂಡು ಬರ್ತಿದೆ!]]></title>
            <link>https://kannada.asianetnews.com/gallery/karnataka-districts/haveri-hangal-5-crore-rajakaluve-canal-collapse-minor-irrigation-scam-reality-check-cr69qd0</link>
            <guid isPermaLink="true">https://kannada.asianetnews.com/gallery/karnataka-districts/haveri-hangal-5-crore-rajakaluve-canal-collapse-minor-irrigation-scam-reality-check-cr69qd0</guid>
            <pubDate>Mon, 17 Aug 2026 14:23:07 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ಹಾನಗಲ್&zwnj;ನಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ರಾಜಕಾಲುವೆ, ಕಳಪೆ ಕಾಮಗಾರಿಯಿಂದಾಗಿ ನಿರ್ಮಾಣ ಪೂರ್ಣಗೊಳ್ಳುವ ಮೊದಲೇ ಕುಸಿದು ಬಿದ್ದಿದೆ. ಈ ದುರಂತದಿಂದಾಗಿ ರೈತರ ನೂರಾರು ಅಡಿಕೆ ಮರಗಳು ನಾಶವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m07e1s5vwp56fysw8q0bwkt2,imgname-haveri-rajakaluve-collapse--5--1786956014779.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ ಜಿಲ್ಲೆಯ ಹಾನಗಲ್&zwnj;ನಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ರಾಜಕಾಲುವೆ, ಕಳಪೆ ಕಾಮಗಾರಿಯಿಂದಾಗಿ ನಿರ್ಮಾಣ ಪೂರ್ಣಗೊಳ್ಳುವ ಮೊದಲೇ ಕುಸಿದು ಬಿದ್ದಿದೆ. ಈ ದುರಂತದಿಂದಾಗಿ ರೈತರ ನೂರಾರು ಅಡಿಕೆ ಮರಗಳು ನಾಶವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಹಾವೇರಿ (ಆ.17): ರಾ&lt;/strong&gt;ಜ್ಯದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ನಡೆಯುವ ಕಮಿಷನ್ ಮತ್ತು ಕಳಪೆ ಕಾಮಗಾರಿಯ ಜಾಲಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಬರೋಬ್ಬರಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಾಜಕಾಲುವೆ, ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಬುಡಮೇಲಾಗಿ ಮುಗುಚಿ ಬಿದ್ದಿದೆ! ಕಾಲುವೆ ಕಟ್ಟುತ್ತಾ ಮುಂದೆ ಸಾಗಿದಂತೆ, ಹಿಂದಿನಿಂದಲೇ ಕುಸಿಯುತ್ತಾ ಬರುತ್ತಿರುವ ಈ ಕಾಮಗಾರಿಯು ಅಧಿಕಾರಿಗಳು ಮತ್ತು ಗುತ್ತಿಗೆದಾರರ ಅಕ್ರಮವನ್ನು ಬೆತ್ತಲು ಮಾಡಿದೆ.&lt;/p&gt;&lt;img&gt;&lt;p&gt;ವಿಶೇಷವೆಂದರೆ, ಈ ಕಳಪೆ ಕಾಮಗಾರಿ ನಡೆದಿರುವುದು ಬೇರೆಲ್ಲೂ ಅಲ್ಲ, ಸಾಕ್ಷಾತ್ ಸಣ್ಣ ನೀರಾವರಿ ಇಲಾಖೆಯ ಕಚೇರಿಯ ಹಿಂಭಾಗದಲ್ಲೇ!&lt;/p&gt;&lt;p&gt;&lt;strong&gt;ಕಾಮಗಾರಿಯ ಹಿನ್ನೆಲೆ ಏನು?&lt;/strong&gt;&lt;/p&gt;&lt;p&gt;ಹಾನಗಲ್ ಪಟ್ಟಣದ ಪ್ರಸಿದ್ಧ ಆನಿಕೆರೆ ಕೋಡಿ ಬಿದ್ದಾಗ ಆ ನೀರು ಮತ್ತೊಂದು ಕೆರೆಗೆ ಸರಾಗವಾಗಿ ಹರಿದು ಹೋಗಲು ಈ ಹಿಂದೆ ಕಚ್ಚಾ ಕಾಲುವೆ ಇತ್ತು. ಇದರಿಂದ ಮಳೆಗಾಲದಲ್ಲಿ ನೀರು ಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗುತ್ತಿತ್ತು.&lt;/p&gt;&lt;p&gt;ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ₹5 ಕೋಟಿ ಅನುದಾನ ಮಂಜೂರು ಮಾಡಿತ್ತು.&lt;/p&gt;&lt;p&gt;ಒಟ್ಟು 1.3 ಕಿಲೋಮೀಟರ್ ಉದ್ದದ ಕಾಂಕ್ರೀಟ್ ರಾಜಕಾಲುವೆ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು.&lt;/p&gt;&lt;p&gt;ಈ ಗುತ್ತಿಗೆಯನ್ನು ಸುಮಿತ್ ಹೆಗಡೆ ಎಂಬ ಗುತ್ತಿಗೆದಾರನಿಗೆ ವಹಿಸಲಾಗಿತ್ತು.&lt;/p&gt;&lt;img&gt;&lt;p&gt;&lt;strong&gt;3 ತಿಂಗಳಲ್ಲೇ ಧರೆಗುರುಳಿದ ಕಾಲುವೆ - ಕಳಪೆ ಕಾಮಗಾರಿ ಬಯಲು:&lt;/strong&gt;&lt;/p&gt;&lt;p&gt;ಕಾಮಗಾರಿ ಆರಂಭವಾಗಿ ಇನ್ನೂ ಕೇವಲ 3 ತಿಂಗಳಷ್ಟೇ ಕಳೆದಿವೆ. ಯೋಜನೆಯ 1.3 ಕಿ.ಮೀ ಪೈಕಿ ಸುಮಾರು 800 ಮೀಟರ್ ಕಾಲುವೆ ನಿರ್ಮಾಣ ಮುಗಿದಿತ್ತು. ಆದರೆ, ಇಲಾಖೆಯ ಕಣ್ಣೆದುರೇ ಕಳಪೆ ಗುಣಮಟ್ಟದ ಸಿಮೆಂಟ್, ಮರಳು ಹಾಗೂ ಕಳಪೆ ದರ್ಜೆಯ ಕಬ್ಬಿಣವನ್ನು ಬಳಸಿ ಕಾಲುವೆ ಕಟ್ಟಲಾಗಿದೆ. ಪರಿಣಾಮವಾಗಿ, ಕಾಮಗಾರಿ ಮುಕ್ತಾಯವಾಗುವ ಮೊದಲೇ ಬೃಹತ್ ಕಾಂಕ್ರೀಟ್ ಗೋಡೆಗಳು ರೈತರ ಜಮೀನಿನ ಕಡೆಗೆ ಮುರಿದು ಬಿದ್ದಿವೆ.&lt;/p&gt;&lt;img&gt;&lt;p&gt;&lt;strong&gt;ಫಸಲಿಗೆ ಬಂದಿದ್ದ ಅಡಿಕೆ ಮರಗಳು ಬಲಿ &ndash; ಅನ್ನದಾತರ ಆಕ್ರೋಶ:&lt;/strong&gt;&lt;/p&gt;&lt;p&gt;ರಾಜಕಾಲುವೆಯ ತಡೆಗೋಡೆಗಳು ದಿಢೀರನೆ ಕುಸಿದು ಬಿದ್ದ ಪರಿಣಾಮ, ಕಾಲುವೆ ಪಕ್ಕದಲ್ಲಿದ್ದ ಫಲವತ್ತಾದ ಕೃಷಿ ಭೂಮಿಗೆ ಭಾರಿ ಹಾನಿಯಾಗಿದೆ.&lt;/p&gt;&lt;p&gt;ರೈತರು ವರ್ಷಗಟ್ಟಲೆ ಕಷ್ಟಪಟ್ಟು ಬೆಳೆಸಿದ್ದ, ಫಸಲಿಗೆ ಬಂದಿದ್ದ ನೂರಾರು ಅಡಿಕೆ ಮರಗಳು ಮಣ್ಣುಪಾಲಾಗಿವೆ.&lt;/p&gt;&lt;p&gt;ಕಾಲುವೆ ನೀರು ಮತ್ತು ಕಾಂಕ್ರೀಟ್ ಅವಶೇಷಗಳು ತೋಟಗಳಿಗೆ ನುಗ್ಗಿ ರೈತರು ಕಂಗಾಲಾಗಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ರೈತರ ಮತ್ತು ಸಾರ್ವಜನಿಕರ ಪ್ರಮುಖ ಬೇಡಿಕೆಗಳು:&lt;/strong&gt;&lt;/p&gt;&lt;p&gt;&lt;strong&gt;ಗುತ್ತಿಗೆದಾರನನ್ನು ಬ್ಲ್ಯಾಕ್&zwnj;ಲಿಸ್ಟ್&zwnj;ಗೆ ಸೇರಿಸಿ: &lt;/strong&gt;ಕಳಪೆ ಕಾಮಗಾರಿ ನಡೆಸಿ ₹5 ಕೋಟಿ ಲೂಟಿ ಮಾಡಲು ಯತ್ನಿಸಿದ ಗುತ್ತಿಗೆದಾರ ಸುಮಿತ್ ಹೆಗಡೆಯನ್ನು ತಕ್ಷಣವೇ ಕಪ್ಪುಪಟ್ಟಿಗೆ (Blacklist) ಸೇರಿಸಬೇಕು.&lt;/p&gt;&lt;p&gt;&lt;strong&gt;ಅಧಿಕಾರಿಗಳ ಅಮಾನತು: &lt;/strong&gt;ಕಚೇರಿಯ ಹಿಂಭಾಗದಲ್ಲೇ ಇಷ್ಟೊಂದು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್&zwnj;ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.&lt;/p&gt;&lt;p&gt;&lt;strong&gt;ಮರು ನಿರ್ಮಾಣ &amp;amp; ಪರಿಹಾರ: &lt;/strong&gt;ಕಾಲುವೆಯನ್ನು ಗುಣಮಟ್ಟದೊಂದಿಗೆ ಮೊದಲಿನಿಂದ ಮರು ನಿರ್ಮಾಣ ಮಾಡಬೇಕು ಹಾಗೂ ಮರಗಳನ್ನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/haveri-hangal-5-crore-rajakaluve-canal-collapse-minor-irrigation-scam-reality-check-cr69qd0"/>
        </item>
        <item>
            <title><![CDATA[Haveri: SSLCಯಲ್ಲಿ 98%, PUCಯಲ್ಲಿ 95%: ಬಿಂದುಶ್ರೀಗೆ ನೀಟ್‌ನಲ್ಲಿ ಬಂದಿದ್ದು 11 ಅಂಕ]]></title>
            <link>https://kannada.asianetnews.com/karnataka-districts/haveri-hanagal-bindu-sri-pawar-had-expected-668-marks-in-the-neet-exam-but-she-got-11-marks-mrq/articleshow-d11lmvl</link>
            <guid isPermaLink="true">https://kannada.asianetnews.com/karnataka-districts/haveri-hanagal-bindu-sri-pawar-had-expected-668-marks-in-the-neet-exam-but-she-got-11-marks-mrq/articleshow-d11lmvl</guid>
            <pubDate>Sat, 25 Jul 2026 07:52:16 +0530</pubDate>
            <description><![CDATA[ಹಾನಗಲ್ಲದ ಪ್ರತಿಭಾವಂತ ವಿದ್ಯಾರ್ಥಿನಿ ಬಿಂದು ಶ್ರೀ ಪವಾರ ಅವರು ನೀಟ್&zwnj; ಪರೀಕ್ಷೆಯಲ್ಲಿ 668 ಅಂಕ ನಿರೀಕ್ಷಿಸಿದ್ದರು, ಆದರೆ ಅವರಿಗೆ -11 ಅಂಕ ಬಂದಿದೆ. ತಮ್ಮ ಓಎಂಆರ್&zwnj; ಶೀಟ್ ಬದಲಾಗಿದೆ ಮತ್ತು ಹೆಬ್ಬೆಟ್ಟಿನ ಗುರುತು ಹೊಂದಿಕೆಯಾಗುತ್ತಿಲ್ಲ ಎಂದು ಆರೋಪಿಸಿ, ಅವರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ದೂರು ನೀಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kybgtf85anaccc935dtxd01p,imgname-bindu-1784945655045.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ನೀಟ್&zwnj; ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ಲ ವಿದ್ಯಾರ್ಥಿನಿಗೆ ಓಎಂಆರ್&zwnj; ಸೀಟ್&zwnj;ನಲ್ಲಿ ಬರೀ -11 ಅಂಕ ಬಂದಿದ್ದು, ಹೆಬ್ಬಟ್ಟಿನ ಗುರುತು ಕೂಡಾ ಓವರ್ ಲ್ಯಾಪ್&zwnj; ಆಗಿದೆ ಎಂದು ವಿದ್ಯಾರ್ಥಿನಿ ದೂರಿದ್ದಾರೆ.&lt;/p&gt;&lt;p&gt;ವಿದ್ಯಾರ್ಥಿನಿ ಬಿಂದು ಶ್ರೀ ಜಗದೀಶ ಪವಾರ ಅವರಿಗೆ ಅನ್ಯಾಯವಾಗಿದ್ದು, ಅವರು ಈ ಕುರಿತು ನ್ಯಾಶನಲ್&zwnj; ಟೆಸ್ಟಿಂಗ್&zwnj; ಏಜೆನ್ಸಿಗೆ ಮೇಲ್&zwnj;ನಲ್ಲಿ ದೂರಿದ್ದಾರೆ. ವಿದ್ಯಾರ್ಥಿನಿ ಹಾವೇರಿ ಗಾಂಧಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದಾರೆ.&lt;/p&gt;&lt;h2&gt;&lt;strong&gt;720ಕ್ಕೆ ಕನಿಷ್ಠ 668 ಅಂಕ ಬರಲೇಬೇಕು&lt;/strong&gt;&lt;/h2&gt;&lt;p&gt;ನೀಟ್&zwnj; ಪರೀಕ್ಷೆಯಲ್ಲಿ ನಾನು ತುಂಬಿದ ಓಎಂಆರ್&zwnj; ಸೀಟ್&zwnj; ಅಂಕ ನನಗೆ ಬಂದಿಲ್ಲ. ನಾನು ವೆಬ್&zwnj;ಸೈಟ್&zwnj;ನಲ್ಲಿ ತರಿಸಿಕೊಂಡ ಓಎಂಆರ್&zwnj; ಸೀಟ್&zwnj; ನನ್ನದಲ್ಲವೇ ಅಲ್ಲ, ನಾನು ಪರೀಕ್ಷೆಗೆ ಹಾಜರಾದ ಸಮಯ, ಹೊರಬಂದ ಸಮಯ, ಓಎಂಆರ್&zwnj; ಸೀಟ್&zwnj;ನಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಅಲ್ಲದೇ ನನ್ನ ಹೆಬ್ಬೆಟ್ಟಿನ ಗುರುತು ಕೂಡಾ ಓವರ್&zwnj; ಲ್ಯಾಪ್&zwnj; ಆಗಿದೆ. ನನಗೆ 720ಕ್ಕೆ ಕನಿಷ್ಠ 668 ಅಂಕ ಬರಲೇಬೇಕು, ಆದರೆ ಬಂದದ್ದು -11 ಅಂಕ ಇದು ನನ್ನ ಫಲಿತಾಂಶದ ಮೇಲೆ ಮಾಡಿದೆ ಎಂದಿದ್ದಾರೆ.&lt;/p&gt;&lt;h3&gt;&lt;strong&gt;SSLCಯಲ್ಲಿ ಶೇ.98 ಮತ್ತು ಪಿಯುಸಿಯಲ್ಲಿ ಶೇ.95&lt;/strong&gt;&lt;/h3&gt;&lt;p&gt;ಎಸ್ಸೆಸ್ಸೆಲ್ಸಿಯಲ್ಲಿ ಶೇ. 98 ಅಂಕ ಪಡೆದಿದ್ದೇನೆ. ಪಿಯುಸಿ ವಿಜ್ಞಾನದಲ್ಲಿ ಶೇ. 95 ಬಂದಿವೆ. ಇಷ್ಟೆದಲ್ಲರ ನಡುವೆ ನಾನು ಪರಿಶ್ರಮಪಟ್ಟು ಓದಿದ ಫಲಿತಾಂಶ ನನಗೆ ಸಿಗಲಿಲ್ಲ, ಎಲ್ಲೋ ನಡೆದ ಮೋಸ ನನ್ನ ಭವಿಷ್ಯದ ಮೇಲೆ ಆಟವಾಡಿದೆ. ಈ ಪರೀಕ್ಷೆ ವ್ಯವಸ್ಥೆಯ ಮೇಲೆ ನನಗೆ ವಿಶ್ವಾಸವಿಲ್ಲ. ಈ ವಿಷಯವನ್ನು ಸಮಗ್ರ ತನಿಖೆ ಮಾಡಿ ನನಗೆ ನ್ಯಾಯ ಒದಗಿಸಬೇಕು. ಇದಕ್ಕೆ ಸಂಬಂಧಿಸಿದಂತೆ ನ್ಯಾಶನಲ್&zwnj; ಟೆಸ್ಟಿಂಗ್&zwnj; ಏಜೆನ್ಸಿ ಅವರಿಗೆ ಜು. 22ರಂದು ಈ ಓಎಂಆರ್&zwnj; ಸೀಟ್&zwnj; ನನ್ನದಲ್ಲ ಹಾಗೂ ಫಲಿತಾಂಶವೂ ನನ್ನದಲ್ಲ ಎಂದು ಸಲ್ಲಿಸಿದ ದೂರಿಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಹೆಲ್ಪಲೈನ್&zwnj; ನಂಬರ್&zwnj;ಗೆ 1 ಸಾವಿರ ಬಾರಿ ಫೋನಾಯಿದ್ದರೂ ನನ್ನ ಪೋನ್&zwnj; ಕರೆ ಸ್ವೀಕರಿಸಿಲ್ಲ. ಪರೀಕ್ಷಾ ಪ್ರಾಧಿಕಾರ ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆ, ಸತ್ಯವನ್ನು ಪರಿಶೀಲಿಸಿ ನನಗೆ ನ್ಯಾಯಕೊಡಿಸುತ್ತದೆ. ನನ್ನದೇ ಆದ ಓಎಂಆರ್&zwnj; ಸೀಟ್&zwnj; ನನಗೆ ಸಿಕ್ಕು 668 ಅಂಕ ಪಡೆದಿದ್ದು, ನನಗೆ ಬಯಸಿದ ಶಿಕ್ಷಣಕ್ಕೆ ಅವಕಾಶ ಸಿಗುತ್ತದೆ ಎಂದು ನಂಬಿದ್ದೇನೆ. ನನ್ನ ನಂಬಿಕೆಗೆ ಮೋಸವಾಗುದಿಲ್ಲ ಎಂಬ ಪೂರ್ಣವಿಶ್ವಾಸವಿದೆ. ಆದರೆ, ನ್ಯಾಯವೇ ಗೆಲ್ಲಬೇಕು ಎಂದು ಬಿಂದುಶ್ರೀ ಪವಾರ ಅವರು ಕನ್ನಡಪ್ರಭಕ್ಕೆ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೆಲಸ ಹುಡುಕೋರಿಗೆ ಗುಡ್&zwnj; ನ್ಯೂಸ್: ಜುಲೈ 29 ರಂದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಗಳ ನೇರ ಸಂದರ್ಶನ!&lt;/strong&gt;&lt;/p&gt;&lt;p&gt;ನನ್ನ ಮಗಳು ಪ್ರತಿಭಾವಂತೆ, ಹಿಂದಿನ ಯಾವ ಪರೀಕ್ಷೆಯಲ್ಲೂ ಆಕೆಗೆ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿಲ್ಲ. ಈ ಬಾರಿ ನೀಟ್&zwnj;ನಲ್ಲಿ ಯಶಸ್ವಿಯಾಗುತ್ತಾಳೆ ಎಂಬ ಪೂರ್ಣವಿಶ್ವಾಸ ಇನ್ನು ಇದೆ. ನ್ಯಾಯಕೊಡಿಸಬೇಕಾದ ಪರೀಕ್ಷಾ ಪ್ರಾಧಿಕಾರದ ಮೇಲೆ ಇನ್ನು ನಂಬಿಕೆ ಇಟ್ಟಿದ್ದೇನೆ. ಇದು ನನ್ನ ಮಗಳ ಓಎಂಆರ್&zwnj; ಸೀಟ್ ಅಲ್ಲ. ಪರಿಶೀಲಿಸಿ ನ್ಯಾಯ ಒದಗಿಸಬೇಕು ಎಂದು ಬಿಂದುಶ್ರೀ ತಂದೆ ಜಗದೀಶ್ ಪವಾರ್ ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;BMTC ಪ್ರಯಾಣಿಕರೇ, ವಾಂತಿ ಬರ್ತಿದೆ, ಕಿಟಕಿ ಸೀಟ್ ಬಿಟ್ಕೊಡಿ ಅಂತ ಜನರು ಬಂದ್ರೆ ಹುಷಾರ್!&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-hanagal-bindu-sri-pawar-had-expected-668-marks-in-the-neet-exam-but-she-got-11-marks-mrq/articleshow-d11lmvl"/>
        </item>
        <item>
            <title><![CDATA[ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ: ಶಾಸಕರಿಂದಲೇ ವೆಚ್ಚ]]></title>
            <link>https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy</link>
            <guid isPermaLink="true">https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy</guid>
            <pubDate>Sat, 04 Jul 2026 07:20:26 +0530</pubDate>
            <description><![CDATA[ಹಾವೇರಿ ಜಿಲ್ಲೆಯಲ್ಲಿನ ಮಳೆ ಕೊರತೆ ನೀಗಿಸಲು ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ಜುಲೈ 7 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆಗೆ ಅಮೆರಿಕದಿಂದ ವಿಶೇಷ ವಿಮಾನ ತರಿಸಲಾಗುತ್ತಿದ್ದು, ಇದರ ಸಂಪೂರ್ಣ ವೆಚ್ಚವನ್ನು ಜಿಲ್ಲೆಯ ಶಾಸಕರೇ ಭರಿಸಲಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwnd1f5rbvzzvntcp6vb4bjg,imgname-cloud-seeding-1783129750712.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ: ಮಳೆ ಕೊರತೆಯ ಹಿನ್ನೆಲೆಯಲ್ಲಿ ರೈತರ ನೆರವಿಗೆ ಧಾವಿಸಿರುವ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರು ಜಿಲ್ಲಾದ್ಯಂತ ಮೋಡ ಬಿತ್ತನೆ ಮಾಡಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜು.7ರಿಂದ ಸತತ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸುವುದಾಗಿ ತಿಳಿಸಿದ್ದಾರೆ.&lt;/p&gt;&lt;p&gt;ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆಗೆ ಕೇಂದ್ರ ಸರ್ಕಾರದಿಂದ ಪರವಾನಗಿ ಕೇಳಲಾಗಿತ್ತು. ಇಂದಷ್ಟೇ ಅವಕಾಶ ನೀಡಿರುವ ಮಾಹಿತಿ ಬಂದಿದೆ.&lt;/p&gt;&lt;h2&gt;&lt;strong&gt;ಪೈಲಟ್&zwnj;ಗಳಿಗೆ ವಿಶೇಷ ತರಬೇತಿ&lt;/strong&gt;&lt;/h2&gt;&lt;p&gt;ಮೋಡ ಬಿತ್ತನೆ ಕಾರ್ಯಕ್ಕಾಗಿಯೇ ಅಮೆರಿಕದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾದ ಅತ್ಯಾಧುನಿಕ ವಿಮಾನವನ್ನು ಬಳಸಲಾಗುತ್ತಿದ್ದು, ಸೋಮವಾರವೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದೆ. ಈ ಕಾರ್ಯಾಚರಣೆಗಾಗಿ ಈಗಾಗಲೇ ಪೈಲಟ್&zwnj;ಗಳಿಗೆ ವಿಶೇಷ ತರಬೇತಿಯನ್ನು ಸಹ ನೀಡಲಾಗಿದೆ ಎಂದು ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Haveri: ಕ್ಷುಲ್ಲಕ ಜಗಳಕ್ಕೆ ಬಲಿಯಾದ ಬೀದಿ ಬದಿ ವ್ಯಾಪಾರಿ! ಇದು ಒಂದು ಮೊಟ್ಟೆಯ ಕಥೆ!&lt;/strong&gt;&lt;/p&gt;&lt;p&gt;ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ಟೆಂಡರ್&zwnj; ಕರೆಯಬೇಕಿದೆ. ಅದಕ್ಕೆ ಸಮಯ ತಗಲುವುದರಿಂದ ಜಿಲ್ಲೆಯ 6 ಶಾಸಕರೇ ಸೇರಿ 8 ತಾಲೂಕುಗಳಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ಮಾಡುತ್ತೇವೆ. ಒಂದು ತಾಸಿನ ಕಾರ್ಯಾಚರಣೆಗೆ ₹15 ಲಕ್ಷ ವೆಚ್ಚವಾಗಲಿದೆ. ಈ ಸಂಪೂರ್ಣ ವೆಚ್ಚವನ್ನು ನಾವೇ ಭರಿಸುತ್ತೇವೆ. ಜಿಲ್ಲೆಯ ರೈತರು ಮಳೆ ಕೊರತೆಯಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಈ ನಿರ್ಧಾರ ಮಾಡಲಾಗಿದೆ. ಸೋಮವಾರ ವಿಮಾನ ಬರಲಿದ್ದು, ಆಕಾಶದಲ್ಲಿ ಮೋಡಗಳ ಲಭ್ಯತೆಯನ್ನು ಪರಿಶೀಲಿಸಿ, ಜು. 7ರಂದಲೇ ಮೋಡ ಬಿತ್ತನೆ ಆರಂಭಿಸಲಾಗುವುದು. ಮಳೆ ತರುವ ಮೋಡಗಳು ಸೂಕ್ತ ಪ್ರಮಾಣದಲ್ಲಿದ್ದಾಗ ಮಾತ್ರ ಬಿತ್ತನೆ ಪ್ರಕ್ರಿಯೆ ಯಶಸ್ವಿಯಾಗುವುದರಿಂದ, ಹವಾಮಾನದ ಮೇಲೆ ನಿಗಾ ಇಟ್ಟು ಕಾರ್ಯಾಚರಣೆ ನಡೆಸಲು ತಂಡ ಸಜ್ಜಾಗಿದೆ ಎಂದು ಪ್ರಕಾಶ ಕೋಳಿವಾಡ ತಿಳಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೈಕೊಟ್ಟ ಮಳೆ: 11 ಎಕ್ರೆ ಗೋವಿನಜೋಳದ ಬೆಳೆ ಟ್ರ&zwj;್ಯಾಕ್ಟರ್&zwnj;ನಿಂದ ನಾಶ ಮಾಡಿದ ಹಾವೇರಿ ರೈತ&lt;/strong&gt;&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/special-american-plane-to-sow-clouds-in-haveri-district-for-3-days-said-mla-prakash-koliwada-mrq/articleshow-fc8v6sy"/>
        </item>
        <item>
            <title><![CDATA[Satish Jarkiholi: ಸಿದ್ದರಾಮಯ್ಯ ಜೊತೆ ಅಸಮಾಧಾನ, ರಾಜ್ಯದ ಸಮಸ್ಯೆ ಅಲ್ಲ, ನಮ್ಮ ಸಮಸ್ಯೆ- ಜಾರಕಿಹೊಳಿ]]></title>
            <link>https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg</link>
            <guid isPermaLink="true">https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg</guid>
            <pubDate>Wed, 15 Jul 2026 06:45:32 +0530</pubDate>
            <description><![CDATA[&lt;p&gt;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxhn4mm6d3jm1a1mbvvgdknm,imgname-----------------------2026-07-15t063911.881-1784077767302.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಜು.15): &lt;/strong&gt;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.&lt;/p&gt;&lt;h2&gt;ರಾಜ್ಯದ ಸಮಸ್ಯೆ ಅಲ್ಲ, ನಮ್ಮ ನಡುವಿನ ಸಮಸ್ಯೆ&lt;/h2&gt;&lt;p&gt;ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಜೊತೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದೇ ಅದು ರಾಜ್ಯದ ಸಮಸ್ಯೆ ಅಲ್ಲ, ನಮ್ಮ ನಮ್ಮ ನಡುವಿನ ಸಮಸ್ಯೆ ಎಂದಷ್ಟೇ ಚುಟುಕಾಗಿ ಉತ್ತರಿಸಿದರು. ಭಿನ್ನಾಭಿಪ್ರಾಯ, ಅಸಮಾಧಾನ ಇಲ್ಲ ಎಂದೇನೂ ಹೇಳಲಿಲ್ಲ.&lt;/p&gt;&lt;h3&gt;ಒತ್ತಾಯದಿಂದ ಬಿಡದಿ ಜಮೀನು ಪಡೆಯುತ್ತಿಲ್ಲ:&amp;nbsp;&lt;/h3&gt;&lt;p&gt;ಬಿಡದಿ ಭಾಗದ ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ ಎಂದು ಸಚಿವ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ. ಜಮೀನು ನೀಡುವುದಿಲ್ಲ ಎಂದು ಹೇಳಿದವರ ಜಮೀನನ್ನು ಸರ್ಕಾರ ಪಡೆದುಕೊಳ್ಳುವುದಿಲ್ಲ. ಜಮೀನು ನೀಡಿದವರ ಜಾಗದ ಸರ್ವೆ ಕಾರ್ಯಕ್ಕಾಗಿ ಅಧಿಕಾರಿಗಳು ನಿನ್ನೆ ಕೂಡ ಭೇಟಿ ನೀಡಿದ್ದರು ಎಂದು ಹೇಳಿದರು.&lt;/p&gt;&lt;p&gt;ರೈತರ ಮೇಲೆ ಯಾವ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಸರ್ಕಾರದಿಂದ ರೈತರ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ. ಅಲ್ಲಿ ನಡೆದಿರುವ ಘಟನೆಯ ಸಂಪೂರ್ಣ ಮಾಹಿತಿ ನನಗೆ ಇಲ್ಲ. ಆದರೆ ರೈತರ ಮೇಲೆ ಯಾವುದೇ ಒತ್ತಡ ಅಥವಾ ಬಲವಂತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;&lt;p&gt;ಆರ್&zwnj;ಎಸ್&zwnj;ಎಸ್ ನೋಂದಣಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆರ್&zwnj;ಎಸ್&zwnj;ಎಸ್ ನೋಂದಣಿ ಕುರಿತ ವಿಚಾರವು ಗೃಹ ಸಚಿವರ ವ್ಯಾಪ್ತಿಗೆ ಸಂಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಹಿಂದ ಸಂಘಟನೆ ಈ ಹಿಂದೆ ಯಾವುದೋ ಹೆಸರಿನಲ್ಲಿ ನೋಂದಣಿಯಾಗಿದೆ. ಆದರೆ ಈ ವಿಚಾರವು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದದ್ದಲ್ಲ ಎಂದು ಸ್ಪಷ್ಟಪಡಿಸಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/satish-jarkiholi-reacts-on-siddaramaiah-and-bidadi-township-row-in-haveri-rav/articleshow-fupu2bg"/>
        </item>
        <item>
            <title><![CDATA[ಗಂಟೆಗೆ 15 ಲಕ್ಷ ರೂ. ವೆಚ್ಚ; ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ, ರೈತರಿಗೆ ನೆರವು]]></title>
            <link>https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en</link>
            <guid isPermaLink="true">https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en</guid>
            <pubDate>Tue, 07 Jul 2026 08:54:50 +0530</pubDate>
            <description><![CDATA[ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kwx8vkq1aj9cwrphw72htqxm,imgname-cloud-seeding--5--1783393799905.jpg" type="image/jpeg" height="390" width="690"/>
            <content:encoded><![CDATA[ಉತ್ತರ ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು, ಹಾವೇರಿ ಜಿಲ್ಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಸರ್ಕಾರವೇ ವಹಿಸಿಕೊಂಡು ಧಾರವಾಡ, ಗದಗ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬ ಒತ್ತಾಯ ಕೇಳಿಬಂದಿದೆ.&lt;img&gt;&lt;p&gt;ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಮೋಡ ಬಿತ್ತನೆ ಅವಶ್ಯವಿದ್ದು ಇದು ಸರ್ಕಾರದಿಂದಲೇ ಈ ಕಾರ್ಯವಾಗಬೇಕಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಲೋಕೋಪಯೋಗಿ ಸಚಿವ, ಧಾರವಾಡ, ಹಾವೇರಿ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣೆ ಉಸ್ತುವಾರಿ ಮಂತ್ರಿ ಸತೀಶ ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಭಾಗದಲ್ಲಿ ಮೋಡ ಬಿತ್ತನೆಯ ವಿಶೇಷ ವಿಮಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.&lt;/p&gt;&lt;img&gt;&lt;p&gt;ಹಾವೇರಿಯಲ್ಲಿ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಈ ಹಿಂದೆ ಸಭೆ ನಡೆಸಿ, ಮೋಡ ಬಿತ್ತನೆ ಕುರಿತು ಚರ್ಚಿಸಲಾಗಿತ್ತು. ಮುಂದುವರಿದ ಭಾಗವಾಗಿ ವಿಶೇಷ ವಿಮಾನದ ಮೂಲಕ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದು ಸರ್ಕಾರದ ಕಾರ್ಯಕ್ರಮ ಆಗಬೇಕು ಎನ್ನುವುದು ನಮ್ಮ ಆಶಯ. ಮಳೆ ಕೊರತೆಯಿಂದ ರೈತರಿಗೆ ಉಂಟಾಗಿರುವ ಸಮಸ್ಯೆ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದರು.&lt;/p&gt;&lt;img&gt;&lt;p&gt;ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ಮುಂಗಾರು ಬೆಳೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿಯ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆ ವರದಿ ಬಂದ ಬಳಿಕ ಸರ್ಕಾರ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. ಬ್ಯಾಂಕ್&zwnj;ಗಳು ಮತ್ತು ವಿಮಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.&lt;/p&gt;&lt;img&gt;&lt;p&gt;ಮೋಡ ಬಿತ್ತನೆ ಕಾರ್ಯಕ್ರಮದ ನೇತೃತ್ವ ವಹಿಸಿದ ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ರೈತರ ಒಳಿತಿಗಾಗಿ ಹಾವೇರಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು ಸೇರಿ ಈ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ 3 ದಿನ ನಿರಂತರ ಮೋಡ ಬಿತ್ತನೆ ನಡೆಯಲಿದೆ. ವಿಶೇಷ ವಿಮಾನ ಒಂದು ತಿಂಗಳು ಹುಬ್ಬಳ್ಳಿಯಲ್ಲೇ ಇರಲಿದ್ದು, ತೇವಾಂಶ ಸಿಕ್ಕಾಗ ವಿಜ್ಞಾನಿಗಳು ಹೇಳಿದ ಸಮಯಕ್ಕೆ ಮೋಡ ಬಿತ್ತನೆ ಮಾಡಲಾಗುವುದು. ಒಂದು ತಾಸಿಗೆ ₹15 ಲಕ್ಷ ವೆಚ್ಚವಾಗುತ್ತದೆ ಎಂದು ತಿಳಿಸಿದರು..&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕ ಭಾಗದಲ್ಲಿ ಸಮರ್ಪಕ ಮಳೆಯಾಗದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬರದ ಛಾಯೆ ಆವರಿಸುತ್ತಿದ್ದರೂ ಸರ್ಕಾರ ಮೋಡ ಬಿತ್ತನೆಗೆ ಏಕೆ ವಿಳಂಬ ಮಾಡುತ್ತಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಪ್ರಶ್ನಿಸಿದರು.&lt;/p&gt;&lt;p&gt;ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮೋಡಗಳು ಕಾಣಿಸಿಕೊಳ್ಳುತ್ತಿದ್ದು, ಮೋಡ ಬಿತ್ತನೆಗೆ ಇದು ಸೂಕ್ತ ಸಮಯವಾಗಿದೆ. ಸರ್ಕಾರ ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಅಧಿಕಾರಿಗಳ ಮಾತು ಕೇಳದೆ ವಿಜ್ಞಾನಿಗಳ ಮಾತು ಕೇಳಬೇಕು. ವಿಳಂಬ ಮಾಡದೆ ತಕ್ಷಣ ಮೋಡ ಬಿತ್ತನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.&lt;/p&gt;&lt;img&gt;&lt;p&gt;ತಂತ್ರಜ್ಞಾನಗಳು ಸಾಕಷ್ಟು ಆವಿಷ್ಕಾರ ಆಗಿರುವುದರಿಂದ ಮೋಡ ಬಿತ್ತನೆ ಯಶಸ್ವಿಯಾಗುತ್ತಿದೆ. 2001 ಮತ್ತು 2017ರಲ್ಲಿ ಇಲ್ಲಿಂದಲೇ ಕಾರ್ಯಾಚರಣೆ ನಡೆಸಿದಾಗ, ಹುಬ್ಬಳ್ಳಿ ಸೇರಿ ಹಾವೇರಿ, ಗದಗ ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ರಕ್ಷಣಾ ಇಲಾಖೆ ವಿಮಾನಗಳು ಖಾಲಿ ನಿಂತಿರುತ್ತವೆ. ಮೋಡ ಬಿತ್ತನೆಗೆ ಅವುಗಳನ್ನು ಬಳಸಿಕೊಂಡು ರೈತರ ನೆರವಿಗೆ ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.&amp;nbsp;&lt;/p&gt;&lt;img&gt;&lt;p&gt;ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಹಾವೇರಿ ಭಾಗದಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಸರ್ಕಾರ ಅನುಮತಿ&zwnj; ನೀಡದಿದ್ದರೆ, ಧಾರವಾಡ, ಗದಗ ಭಾಗದ&zwnj; ಶಾಸಕರ ಸಹಕಾರದಲ್ಲಿ ನಾವೇ ಈ ಭಾಗದಲ್ಲೂ ಮೋಡ ಬಿತ್ತನೆ ಮಾಡುತ್ತೇವೆ ಎಂದರು.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.&lt;/p&gt;&lt;p&gt;ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಧಾರವಾಡ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ನಡೆಸುವಂತೆ ಮನವಿ ಮಾಡಲಾಗಿದೆ. ಸರ್ಕಾರ ಈ ಕುರಿತು ಕ್ರಮಕೈಗೊಳ್ಳದಿದ್ದರೆ ಧಾರವಾಡ ಹಾಗೂ ಗದಗ ಜಿಲ್ಲೆಯ ಶಾಸಕರು ಒಗ್ಗೂಡಿ ಸ್ವಂತ ಪ್ರಯತ್ನದಿಂದ ಮೋಡ ಬಿತ್ತನೆ ನಡೆಸುವ ಕುರಿತು ಚಿಂತನೆ ನಡೆಸಲಾಗುವುದು. ಮೋಡ ಬಿತ್ತನೆಗೆ ಬಳಸುವ ವಿಮಾನ ಒಂದು ತಿಂಗಳ ಕಾಲ ಈ ಭಾಗದಲ್ಲೇ ಲಭ್ಯವಿರುವುದರಿಂದ ಅಗತ್ಯವಿದ್ದರೆ ಅದರ ಪ್ರಯೋಜನ ಪಡೆಯಲು ಸಿದ್ಧರಾಗಿದ್ದೇವೆ ಎಂದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/gallery/karnataka-districts/mla-prakash-koliwad-cost-of-rs-15-lakh-per-hour-cloud-seeding-launched-in-haveri-district-helping-farmers-mrq-g1n09en"/>
        </item>
        <item>
            <title><![CDATA[Haveri: ಯುವಕರಿಂದ ಉಮ್ಲಿಂಗ್ ಲಾ ಪಾಸ್‌ಗೆ ಬೈಕ್ ಸವಾರಿ: 47 ದಿನಗಳ ಅದ್ಭುತ ಯಾತ್ರೆ]]></title>
            <link>https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2</link>
            <guid isPermaLink="true">https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2</guid>
            <pubDate>Mon, 06 Jul 2026 06:12:59 +0530</pubDate>
            <description><![CDATA[ರಾಣಿಬೆನ್ನೂರಿನ ಶ್ಯಾಮಸುಂದರ ದೈವಜ್ಞ ಮತ್ತು ಅವರ ಸ್ನೇಹಿತರು 47 ದಿನಗಳ ಮೋಟಾರ್ ಸೈಕಲ್ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಯಾತ್ರೆಯು ಉತ್ತರಾಖಂಡದ ಪಂಚ ಕೇದಾರದಿಂದ ಲಡಾಖ್&zwnj;ನ ಉಮ್ಲಿಂಗ್ ಲಾ ಪಾಸ್&zwnj;ವರೆಗೆ ಸಾಗಿ, ಆಧ್ಯಾತ್ಮಿಕ, ದೇಶಭಕ್ತಿ ಮತ್ತು ಸಾಹಸಮಯ ಅನುಭವಗಳನ್ನು ನೀಡಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kwtdxzw8b2nrrkzdgcwas9h2,imgname-ranibennur-1783298457480.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಸವರಾಜ ಸರೂರ&amp;nbsp;&lt;/strong&gt;&lt;/p&gt;&lt;p&gt;&lt;strong&gt;ಹಾವೇರಿ: &lt;/strong&gt;ರಾಣಿಬೆನ್ನೂರು ನಗರದ ಶಾಮಸುಂದರ ದೈವಜ್ಞ ತನ್ನ ಸ್ನೇಹಿತರ ಜತೆ ಇತ್ತೀಚಿಗೆ ಉತ್ತರ ಭಾರತದಾದ್ಯಂತ 47 ದಿನಗಳ ಮೋಟಾರ್ ಸೈಕಲ್ ಪ್ರವಾಸವನ್ನು ಯಶಸ್ವಿಯಾಗಿ ಪೂರೈಸಿ ಸಾಧನೆ ಮೆರೆದಿದ್ದಾರೆ.&lt;/p&gt;&lt;p&gt;ಈ ತಂಡವು ಉತ್ತರಾಖಂಡದ ಪಂಚ ಕೇದಾರ ದೇವಾಲಯಗಳಿಂದ ಲಡಾಖ್&zwnj;ನ ಉಮ್ಲಿಂಗ್ ಲಾ ಕಣಿವೆ ವರೆಗಿನ ಮಾರ್ಗಗಳಲ್ಲಿ ಸಾವಿರಾರು ಕಿಲೋಮೀಟರ್&zwnj;ಗಳಷ್ಟು ಪ್ರಯಾಣಿಸಿತು. ಈ ಯಾತ್ರೆಯ ಭಾಗವಾಗಿ, ಅವರು ಹರಿದ್ವಾರಕ್ಕೆ ಹೋಗುವ ಮಾರ್ಗಮಧ್ಯೆ 188 ಕಿ.ಮೀ. ಕಠಿಣ ಪಾದಯಾತ್ರೆಯನ್ನು ಕೈಗೊಂಡರು. ಇದು ಅವರ ಸಹಿಷ್ಣುತೆ ಮತ್ತು ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ.&amp;nbsp;&lt;/p&gt;&lt;p&gt;ರೈಡರ್ಸ್ ಶ್ಯಾಮಸುಂದರ ದೈವಜ್ಞ (ರಾಣಿಬೆನ್ನೂರು), ಬಾಹುಬಲಿ ಹುಕ್ಕೇರಿ, ಶುಭಂ ಬಡವೆ (ಚಿಕ್ಕೋಡಿ), ಸೋಮನಾಥ ಸುತಾರ್, ವಿವೇಕ ಪಾಟೀಲ, ಆದರ್ಶ ಪಾಟೀಲ (ಕುರಂದವಾಡ, ಮಹಾರಾಷ್ಟ್ರ) ಒಳಗೊಂಡ ತಂಡವು ಪ್ರಕೃತಿಯನ್ನು ಅನುಭವಿಸಲು, ಸವಾಲಿನ ಭೂಪ್ರದೇಶವನ್ನು ಸುತ್ತಾಡಲು ಮತ್ತು ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆಯ ಶಕ್ತಿಯನ್ನು ವೀಕ್ಷಿಸಲು ತೆರಳಿದರು.&lt;/p&gt;&lt;p&gt;ಪತ್ರಿಕೆಯೊಂದಿಗೆ ತನ್ನ ಪ್ರವಾಸದ ಅನುಭವವನ್ನು ಹಂಚಿಕೊಂಡ ಶ್ಯಾಮಸುಂದರ ಅವರು, ಮೇ 11ರಂದು ಆರಂಭವಾದ ನಮ್ಮ ಪ್ರಯಾಣವು ಕೇವಲ ವಿವಿಧ ರಾಜ್ಯಗಳ ಮೂಲಕ ಸಾಗುವ ರಸ್ತೆ ಪ್ರಯಾಣಕ್ಕಿಂತ ಮಿಗಿಲಾಗಿದ್ದಾಗಿತ್ತು. ಇದು ಭಗವಂತ ಶಿವನನ್ನು ಅರಸುವ ಆಧ್ಯಾತ್ಮಿಕ ಅನ್ವೇಷಣೆ, ಪ್ರಕೃತಿಯೊಂದಿಗಿನ ಗಾಢವಾದ ವೈಯಕ್ತಿಕ ನಂಟು ಹಾಗೂ ಸೈನಿಕರ ತ್ಯಾಗವನ್ನು ಕಣ್ತುಂಬಿಕೊಂಡ ದೇಶಭಕ್ತಿಯ ಅನುಭವವಾಗಿತ್ತು. ಇದು ನಮಗೆ ಧೈರ್ಯ ಮತ್ತು ಆತ್ಮವಿಶ್ವಾಸದಂತಹ ಜೀವನ ಪಾಠಗಳನ್ನೂ ಕಲಿಸಿತು. ಇಂತಹ ಪ್ರಯಾಣಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಆತ್ಮವಿಶ್ವಾಸವನ್ನು ರೂಪಿಸುತ್ತವೆ.&lt;/p&gt;&lt;h2&gt;&lt;strong&gt;ಸುಮಾರು 188 ಕಿಮೀ ಚಾರಣ ಮತ್ತು 400 ಕಿಮೀ ಚಾಲನೆ&lt;/strong&gt;&lt;/h2&gt;&lt;p&gt;&amp;nbsp;ಘರ್ವಾಲ್ ಹಿಮಾಲಯದಲ್ಲಿರುವ ಕೇದಾರನಾಥ, ತುಂಗನಾಥ, ರುದ್ರನಾಥ, ಮಧ್ಯ ಮಹೇಶ್ವರ ಮತ್ತು ಕಪಿಲೇಶ್ವರವನ್ನು ಒಳಗೊಂಡ ಪಂಚ ಕೇದಾರ ಯಾತ್ರೆಯು ಸುಮಾರು 188 ಕಿಮೀ ಚಾರಣ ಮತ್ತು 400 ಕಿಮೀ ಚಾಲನೆಯನ್ನು ಒಳಗೊಂಡಿತ್ತು. ನಾವು ಕಡಿದಾದ ಮೆಟ್ಟಿಲುಗಳು, ನಿರ್ಜನ ಕಣಿವೆಗಳು, ಕಲ್ಲುಬಂಡೆಗಳ ಹಾದಿಗಳು, ದಟ್ಟ ಅರಣ್ಯಗಳು ಮತ್ತು ಹಿಮಾವೃತ ಶಿಖರಗಳನ್ನು ದಾಟಿದೆವು. ಬೈಕಿಂಗ್ ಮತ್ತು ಪರ್ವತಾರೋಹಣ ಸೇರಿದಂತೆ ಪ್ರತಿಯೊಂದು ಹಂತವು ನಮ್ಮ ಶಕ್ತಿಯನ್ನು ಪರೀಕ್ಷಿಸಿತು. ನಾವು ಶಿಮ್ಲಾದಲ್ಲಿ ಮೊದಲ ಹಂತವನ್ನು ಪೂರ್ಣಗೊಳಿಸಿದೆವು.&lt;/p&gt;&lt;p&gt;ಟಿಬೆಟ್ ಮತ್ತು ಭಾರತದ ನಡುವೆ ಇರುವ ಸ್ಥಿತಿ ಕಣಿವೆಯ ಭೂ ಪ್ರದೇಶವು ಒಂದು ಭಿನ್ನ ಲೋಕದಂತೆ ಭಾಸವಾಗುತ್ತದೆ. ಶಿಮ್ಲಾದಿಂದ ನಿರ್ಜನ ಪ್ರದೇಶಗಳ ಮೂಲಕ ಪ್ರಯಾಣಿಸಿ ಬುದ್ಧ ವಿಹಾರಗಳು ಮತ್ತು ಒರಟಾದ ಭೂಪ್ರದೇಶಕ್ಕೆ ಹೆಸರುವಾಸಿಯಾದ ಭಾರತ-ಟಿಬೆಟ್ ಗಡಿಯಲ್ಲಿರುವ ಕೊನೆಯ ಗ್ರಾಮವಾದ ಚಿಟ್ಕುಲ್ ತಲುಪಿದೆವು. ಅಲ್ಲಿಂದ ಕುನು ಮನಾಲಿ, ಲೆಹ್, ಲಡಾಕ್, ಸಿಯಾಚಿನ್ ಗಡಿ ಪ್ರದೇಶ, ರೇಜಾಂಗ್ ಲಾ, ಕಾರ್ಗಿಲ್, ಶ್ರೀನಗರ, ಅಮೃತಸರ, ವಾಘಾ ಗಡಿ, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಮಾರ್ಗವಾಗಿ ರಾಣಿಬೆನ್ನೂರಿಗೆ ಮರಳಿದೆವು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/haveri-shyamasundara-daivagya-from-ranibennur-and-his-friends-have-successfully-completed-a-47-day-motorcycle-trip-mrq/articleshow-k8u7yk2"/>
        </item>
        <item>
            <title><![CDATA[ಮುಗಿಯದ ಶಿರಸಿ ಹಾವೇರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ; ಪ್ರತಿನಿತ್ಯ ತೊಂದರೆ]]></title>
            <link>https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm</link>
            <guid isPermaLink="true">https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm</guid>
            <pubDate>Tue, 04 Aug 2026 07:16:01 +0530</pubDate>
            <description><![CDATA[&lt;p&gt;ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಅಪೂರ್ಣ ಕಾಮಗಾರಿಯಿಂದಾಗಿ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚಿನ ಮಳೆಯಿಂದ ಸೋಮನಹಳ್ಳಿ ರಸ್ತೆ ಬಂದ್ ಆಗಿದ್ದು, ರಸ್ತೆ ಪಕ್ಕದ ನಿವಾಸಿಗಳು ಅಪಘಾತ, ಆರೋಗ್ಯ ಸಮಸ್ಯೆ ಹಾಗೂ ಪ್ರವಾಹದ ಭೀತಿಯಲ್ಲಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz56x0jjjeefpegjkw8pkryv,imgname-sirsi-haveri-1785807667794.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶಂಕರ ಜಿ. ಜಾವೂರ&lt;/strong&gt;&lt;/p&gt;&lt;p&gt;&lt;strong&gt;ಶಿರಸಿ: &lt;/strong&gt;ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮುಗಿಯುವ ವರೆಗೂ ಜನರ ಗೋಳು ಮುಗಿಯುವಂತೆ ಕಾಣುತ್ತಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಸೋಮನಹಳ್ಳಿ ರಸ್ತೆ ಮಾರ್ಗ ಬಂದ್&zwnj; ಆಗಿತ್ತು.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರು ನಿತ್ಯ ಹಲವಾರು ರೀತಿಯ ಸಮಸ್ಯೆ ಎದುರಿಸುತ್ತಲೇ ಇದ್ದಾರೆ. ನಿತ್ಯ ಅಪಘಾತಗಳು ಸಂಭವಿಸುತ್ತಲೇ ಇದೆ. ಹಲವರು ಕೈ-ಕಾಲು ಮುರಿದುಕೊಂಡಿದ್ದಾರೆ. ಈ ಮಾರ್ಗದಲ್ಲಿ ಪ್ರಯಾಣಿಸುವವರ ಸಂಕಷ್ಟ ಒಂದೆಡೆಯಾದರೆ ರಸ್ತೆ ಅಕ್ಕಪಕ್ಕದ ನಿವಾಸಿಗಳು ಬೇರೆ ಬೇರೆ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಗೌಡಳ್ಳಿ ನಿವಾಸಿಗಳಿಂದ ಮನವಿ ಸಲ್ಲಿಕೆ&lt;/strong&gt;&lt;/h2&gt;&lt;p&gt;ರಸ್ತೆ ಸರಿಪಡಿಸುವಂತೆ ಹಾಗೂ ನೀರು ಸರಾಗವಾಗಿ ಹರಿದು ಹೋಗಲು ಸಿಡಿ ನಿರ್ಮಾಣ ಮಾಡಬೇಕೆಂದು ಗೌಡಳ್ಳಿ ನಿವಾಸಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಾಗೂ ಸ್ಥಳೀಯ ಸಂಸದರಿಗೆ ಈಗಾಗಲೇ ಮನವಿ ಮಾಡಿದ್ದಾರೆ. ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಸೋಮನಹಳ್ಳಿ ಪ್ರವೇಶ ಮಾಡುವ ರಸ್ತೆಯಲ್ಲಿ ನೀರು ತುಂಬಿತ್ತು. ಸ್ಥಳೀಯರು ಬೇರೆ ಮಾರ್ಗದ ಮೂಲಕ ತಮ್ಮ ದಿನನಿತ್ಯದ ವ್ಯವಹಾರಗಳನ್ನು ನಡೆಸಬೇಕಾಯಿತು.&lt;/p&gt;&lt;p&gt;ಅಕಸ್ಮಾತ್ ಇನ್ನೂ ಹೆಚ್ಚಿನ ಮಳೆಯಾಗಿ ನೀರಿನ ಪ್ರಮಾಣ ಹೆಚ್ಚಾದರೆ ರಸ್ತೆ ಕೊರೆದು, ರಸ್ತೆ ಪಕ್ಕದಲ್ಲಿರುವ ಮನೆಗಳಿಗೆ ಹಾನಿ ಆಗುವ ಸಾಧ್ಯತೆ ಇದೆ. ಈಗಾಗಲೇ ನಿವಾಸಿಗಳು ಜೀವ ಭಯದಲ್ಲಿಯೇ ರಾತ್ರಿ ನಿದ್ರೆ ಇಲ್ಲದೆ ಕಳೆಯುವಂತಾಗಿದೆ. ಅತಿ ಶೀಘ್ರವಾಗಿ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;&lt;p&gt;ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ಮನೆಗಳು ಜವಳು ಹಿಡಿಯುತ್ತಿವೆ. ಇದರಿಂದ ಮನೆಯಲ್ಲಿ ತಂಪು ಹೆಚ್ಚಾಗಿ, ಮೈ ಕೈ ನೋವು, ಶೀತ ಮತ್ತು ನೆಗಡಿಯಂತಹ ಕಾಯಿಲೆಗಳು ವೃದ್ಧರು, ದುರ್ಬಲರಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ನಿವಾಸಿಗಳು ದೂರಿದ್ದಾರೆ.&lt;/p&gt;&lt;p&gt;ಯಾವೊಬ್ಬ ಅಧಿಕಾರಿಯಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಜನರಿಗೆ ಸಂಕಷ್ಟ ಎದುರಾದಾಗ ಸಂಕಷ್ಟಕ್ಕೆ ಸ್ಪಂದಿಸಲು ಯಾರೂ ಬರುವುದಿಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ.&lt;/p&gt;&lt;p&gt;ಮುಂದಿನ ದಿನಗಳಲ್ಲಿ ಶಿರಸಿ - ಹಾವೇರಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಇಲ್ಲಿನ ಸ್ಥಳೀಯ ನಿವಾಸಿಗಳು ಸೇರಿಕೊಂಡು ಪ್ರತಿಭಟನೆ ಮಾಡುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.&lt;/p&gt;&lt;h3&gt;&lt;strong&gt;ಸಿಡಿ ನಿರ್ಮಾಣ&lt;/strong&gt;&lt;/h3&gt;&lt;p&gt;ಮಳೆಗಾಲ ಇರುವುದರಿಂದ ಆ ಸ್ಥಳದಲ್ಲಿ ಸಿಡಿ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಮಳೆಯ ಪ್ರಮಾಣ ಕಡಿಮೆಯಾದ ನಂತರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಡಿ ನಿರ್ಮಾಣ ಮಾಡಿ ಸರಾಗವಾಗಿ ನೀರು ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಿ ಕೊಡುತ್ತೇವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹೇಳಿದರು.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/the-public-is-facing-daily-problems-due-to-the-incomplete-work-on-the-sirsi-haveri-national-highway-mrq/articleshow-kpo0cvm"/>
        </item>
        <item>
            <title><![CDATA[Bidadi Township Row: ಹೆಚ್‌ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?]]></title>
            <link>https://kannada.asianetnews.com/karnataka-districts/bidadi-township-row-former-cm-basavaraj-bommai-slams-cm-dk-shivakumar-rav/articleshow-m9r88to</link>
            <guid isPermaLink="true">https://kannada.asianetnews.com/karnataka-districts/bidadi-township-row-former-cm-basavaraj-bommai-slams-cm-dk-shivakumar-rav/articleshow-m9r88to</guid>
            <pubDate>Fri, 17 Jul 2026 10:14:49 +0530</pubDate>
            <description><![CDATA[&lt;p&gt;ರೈತರ ವಿರೋಧದ ನಡುವೆಯೂ ಬಿಡದಿ ಟೌನ್&zwnj;ಶಿಪ್&zwnj; ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಆರಂಭಿಸಿದ ಯೋಜನೆಯ ಮೇಲೆ ಡಿಸಿಎಂ ಡಿಕೆಶಿಗೆ ಏಕಿಷ್ಟು ಪ್ರೀತಿ, ಇದರ ಹಿಂದೆ ಗುಪ್ತ ಕನಸಿದೆಯೇ? ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxq5rabjex6vra6c7bcfzryw,imgname-----------------------2026-07-17t100214.150-1784262961522.jpg" type="image/jpeg" height="390" width="690"/>
            <content:encoded><![CDATA[&lt;p&gt;ಹಾವೇರಿ(ಜು.17): ರೈತರ ವಿರೋಧದ ನಡುವೆಯೂ ಬಿಡದಿ ಟೌನ್&zwnj;ಶಿಪ್&zwnj; ಯೋಜನೆ(Bidadi Township project) ಮುಂದುವರಿಸಲು ರಾಜ್ಯ ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ. ರೈತರ ಫಲವತ್ತಾದ ಜಮೀನಿನ ಬದಲು ಸರ್ಕಾರದ ಜಮೀನಿನಲ್ಲೇ ಟೌನ್&zwnj;ಶಿಪ್&zwnj; ನಿರ್ಮಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.&lt;/p&gt;&lt;h2&gt;ಹೆಚ್&zwnj;ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?&lt;/h2&gt;&lt;p&gt;ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಡದಿ ಟೌನ್&zwnj;ಶಿಪ್ ಯೋಜನೆಯನ್ನು ಎಚ್.ಡಿ.ಕುಮಾರಸ್ವಾಮಿ ಪ್ರಾರಂಭಿಸಿದ್ದು, ಆ ನಂತರ ಯಡಿಯೂರಪ್ಪ ಅವರ ಅವಧಿಯಲ್ಲಿ ಈ ಬಗ್ಗೆ ಯಾವುದೇ ಪ್ರಗತಿಯಾಗಿಲ್ಲ ಎಂ ಸಿಎಂ ಡಿ.ಕೆ.ಶಿವಕುಮಾರ್&zwnj;(DK Shivakumar) ಹೇಳಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು ಇದನ್ನು ಪ್ರಾರಂಭಿಸಿದ್ದರೆ, ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ? ಎಂದು ಪ್ರಶ್ನಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!&lt;/p&gt;&lt;h3&gt;ಎಲ್ಲದಕ್ಕೂ ಕುಮಾರಸ್ವಾಮಿ ಟೀಕಿಸುವ ಡಿಕೆಶಿ ಇದರಲ್ಲೇಕೆ ಆಸಕ್ತಿ?&lt;/h3&gt;&lt;p&gt;ಎಲ್ಲ ವಿಷಯಗಳಲ್ಲೂ ಕುಮಾರಸ್ವಾಮಿ ಅವರನ್ನು ಟೀಕಿಸುವ ಶಿವಕುಮಾರ್&zwnj;, ಈ ಟೌನ್&zwnj;ಶಿಪ್ ಯೋಜನೆಯಲ್ಲಿ ಮಾತ್ರ ಅವರನ್ನು ಏಕೆ ಅನುಸರಿಸುತ್ತಿದ್ದಾರೆ. ಟೌನ್&zwnj;ಶಿಪ್ ಯೋಜನೆಯಲ್ಲಿ ಡಿಕೆಶಿಗೆ ಹಿತಾಸಕ್ತಿ ಏನಿದೆ? ಈ ಕನಸಿನ ಹಿಂದೆ ಸಿಎಂಗೆ ಮತ್ತೊಂದು ಗುಪ್ತ ಕನಸಿದೆಯೇ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Yettinahole water: 10 ವರ್ಷಗಳ ಬಳಿಕ ಕೊನೆಗೂ ತುಮಕೂರಿಗೆ ಬಂತು ಎತ್ತಿನಹೊಳೆ ನೀರು!&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bidadi-township-row-former-cm-basavaraj-bommai-slams-cm-dk-shivakumar-rav/articleshow-m9r88to"/>
        </item>
        <item>
            <title><![CDATA[ಎಲ್ಲವೂ ರಾಯರ ಪವಾಡ: ಸಾವಿನ ದವಡೆಯಿಂದ ಪಾರಾದ MBBS ವಿದ್ಯಾರ್ಥಿನಿ! ವೀಲ್ ಚೇರ್‍‌ನಿಂದ ಎದ್ದು ಓಡಾಡಿದ್ದು ಹೇಗೆ?]]></title>
            <link>https://kannada.asianetnews.com/haveri/the-miracle-of-guru-raghavendra-wheelchair-bound-mbbs-student-walks-again-after-battling-rare-disease-gkn/articleshow-mybehp6</link>
            <guid isPermaLink="true">https://kannada.asianetnews.com/haveri/the-miracle-of-guru-raghavendra-wheelchair-bound-mbbs-student-walks-again-after-battling-rare-disease-gkn/articleshow-mybehp6</guid>
            <pubDate>Sat, 15 Aug 2026 21:11:11 +0530</pubDate>
            <description><![CDATA[&lt;p&gt;ಅಪರೂಪದ ಕಾಯಿಲೆಯಿಂದ ವೀಲ್ ಚೇರ್ ಗೆ ಸೀಮಿತವಾಗಿದ್ದ ಹಾವೇರಿಯ ಎಂಬಿಬಿಎಸ್ ವಿದ್ಯಾರ್ಥಿನಿ ನಿವೇದಿತಾ, ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದ ಪವಾಡಸದೃಶವಾಗಿ ಗುಣಮುಖರಾಗಿದ್ದಾರೆ. ವೈದ್ಯಕೀಯ ವಿಜ್ಞಾನವೇ ಕೈಚೆಲ್ಲಿದ್ದ ಈ ಕಾಯಿಲೆಯು ರಾಯರ ಮಂತ್ರಾಕ್ಷತೆಯ ಮಹಿಮೆಯಿಂದ ಕೇವಲ ಮೂರೇ ವಾರಗಳಲ್ಲಿ ವಾಸಿಯಾಗಿದ್ದು, ಯುವತಿ ಈಗ ಮೊದಲಿನಂತೆ ಓಡಾಡುತ್ತಿದ್ದಾಳೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m0319sh627vgtq1tw6cfz8ha,imgname-haveri-nivedita-mbbs-student-1786808428070.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ನಂಬಿದವರಿಗೆ ಇಷ್ಟಾರ್ಥ ಸಿದ್ಧಿಸುವ ಕಲ್ಪವೃಕ್ಷ, ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳು. ಈ ಮಾತಿಗೆ ಸಾಕ್ಷಿಯೆಂಬಂತೆ ಹಾವೇರಿ ಜಿಲ್ಲೆಯಲ್ಲಿ ಒಂದು ವಿಸ್ಮಯಕಾರಿ ಘಟನೆ ನಡೆದಿದೆ. ಆಧುನಿಕ ವೈದ್ಯಕೀಯ ವಿಜ್ಞಾನವೇ ಕೈಚೆಲ್ಲಿದ್ದ ಪ್ರಕರಣವೊಂದರಲ್ಲಿ ರಾಯರ ಮಂತ್ರಾಕ್ಷತೆ ಮತ್ತು ಅನುಗ್ರಹದಿಂದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯೊಬ್ಬಳು ಅಕ್ಷರಶಃ ಸಾವಿನ ದವಡೆಯಿಂದ ಪಾರಾಗಿ ಬಂದಿದ್ದಾಳೆ.&lt;/p&gt;&lt;h2&gt;&lt;strong&gt;ಏನಾಗಿತ್ತು?&lt;/strong&gt;&lt;/h2&gt;&lt;p&gt;ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿ ನಿವೇದಿತಾ ಶಿವಪ್ಪ ನೆಗಳೂರು (22). ಗದಗದ ಜಿಮ್ಸ್ (GIMS) ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಫೈನಲ್ ಇಯರ್ ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ. ಸುಮಾರು ಏಳು ತಿಂಗಳ ಹಿಂದೆ ನಿವೇದಿತಾಗೆ ಪದೇ ಪದೇ ಮೂರ್ಚೆ ಹೋಗುವ ಸಮಸ್ಯೆ ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆಯೇ ಆಕೆಯ ಕೈಕಾಲುಗಳ ಸ್ವಾಧೀನ ತಪ್ಪಿಹೋಗಿತ್ತು. ವೀಲ್ ಚೇರ್ ಇಲ್ಲದೆ ಒಂದು ಹೆಜ್ಜೆ ಇಡಲಾರದ ಸ್ಥಿತಿಗೆ ಆಕೆ ತಲುಪಿದ್ದಳು.&lt;/p&gt;&lt;h2&gt;&lt;strong&gt;ವೈದ್ಯಲೋಕಕ್ಕೇ ಸವಾಲಾಗಿದ್ದ ಕಾಯಿಲೆ&lt;/strong&gt;&lt;/h2&gt;&lt;p&gt;ನಿವೇದಿತಾ ಅನುಭವಿಸುತ್ತಿದ್ದದ್ದು ಸಾಮಾನ್ಯ ಕಾಯಿಲೆಯಲ್ಲ. ಅದು 'ಆಟೋ ಇಮ್ಯೂನ್ ಡಿಸೀಸ್' (Autoimmune Disease). ದೇಹದ ರೋಗನಿರೋಧಕ ಶಕ್ತಿಯೇ ತನ್ನದೇ ಆದ ಮೆದುಳಿನ ಕೋಶಗಳ ಮೇಲೆ ದಾಳಿ ಮಾಡಿ ಹಾನಿ ಉಂಟುಮಾಡುವ ಗಂಭೀರ ಸ್ಥಿತಿ ಇದು. ಹುಬ್ಬಳ್ಳಿಯ ಪ್ರತಿಷ್ಠಿತ ಆಸ್ಪತ್ರೆಗಳು, ಮಣಿಪಾಲ್ ಆಸ್ಪತ್ರೆ ಸೇರಿದಂತೆ ಹಲವೆಡೆ ಚಿಕಿತ್ಸೆ ಕೊಡಿಸಲಾಯಿತು. ಸುಮಾರು 5-6 ಲಕ್ಷ ರೂಪಾಯಿ ಖರ್ಚು ಮಾಡಿದರೂ ಚೇತರಿಕೆ ಕಾಣಲಿಲ್ಲ. ಒಂದು ಹಂತದಲ್ಲಿ ಆಕೆ ಐಸಿಯುಗೆ ದಾಖಲಾದಾಗ ಬದುಕುಳಿಯುವ ಭರವಸೆಯೇ ಕ್ಷೀಣಿಸಿತ್ತು. ವೈದ್ಯರೇ ಕಂಗಾಲಾಗಿದ್ದರು.&lt;/p&gt;&lt;h2&gt;&lt;strong&gt;ರಾಯರ ಮಠದಲ್ಲಿ ಪವಾಡ!&lt;/strong&gt;&lt;/h2&gt;&lt;p&gt;ವಿಧಿಯಾಟದ ನಡುವೆ ಕುಟುಂಬಸ್ಥರು ರಾಯರ ಮೇಲೆ ಭಾರ ಹಾಕಿ ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ರಾಘವೇಂದ್ರ ಮಠಕ್ಕೆ ಆಕೆಯನ್ನು ಕರೆತಂದರು. ಅದೇ ಸಮಯದಲ್ಲಿ 100ನೇ ಸುಶೀಲೇಂದ್ರ ತೀರ್ಥರ ಆರಾಧನಾ ಮಹೋತ್ಸವಕ್ಕಾಗಿ ಮಂತ್ರಾಲಯದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಗಳು ಅಲ್ಲಿಗೆ ಆಗಮಿಸಿದ್ದರು. ವೀಲ್ ಚೇರ್&zwnj;ನಲ್ಲಿ ಕುಳಿತಿದ್ದ ನಿವೇದಿತಾಳ ಸ್ಥಿತಿ ಕಂಡು ಮರುಗಿದ ಸ್ವಾಮೀಜಿಗಳು, ರಾಯರ ಮಂತ್ರಾಕ್ಷತೆ ಮತ್ತು ಭಾವಚಿತ್ರವನ್ನು ನೀಡಿ ಆಶೀರ್ವದಿಸಿದರು. 5 ವಾರಗಳ ಕಾಲ ರಾಯರ ಮಠಕ್ಕೆ ನಡೆದುಕೊಂಡು ಪ್ರದಕ್ಷಿಣೆ ಹಾಕಿ ಎಂದು ಸಲಹೆ ನೀಡಿದರು.&lt;/p&gt;&lt;h2&gt;&lt;strong&gt;ಮೂರೇ ವಾರದಲ್ಲಿ ಕಂಡ ಅಚ್ಚರಿಯ ಬದಲಾವಣೆ!&lt;/strong&gt;&lt;/h2&gt;&lt;p&gt;ಸ್ವಾಮೀಜಿಗಳ ಮಾತಿನಂತೆ ನಿವೇದಿತಾ ಭಕ್ತಿಯಿಂದ ರಾಯರ ಸೇವೆ ಆರಂಭಿಸಿದಳು. ಆಶ್ಚರ್ಯವೆಂದರೆ ಐದು ವಾರ ಮುಗಿಯುವ ಮೊದಲೇ, ಅಂದರೆ ಕೇವಲ 3 ವಾರಗಳಲ್ಲಿ ನಿವೇದಿತಾಳ ಆರೋಗ್ಯದಲ್ಲಿ ಅದ್ಭುತ ಚೇತರಿಕೆ ಕಂಡುಬಂದಿತು. ವೀಲ್ ಚೇರ್&zwnj;ನಲ್ಲಿ ಅಸಹಾಯಕಳಾಗಿ ಕುಳಿತಿದ್ದ ಆಕೆ, ಇಂದು ಯಾರ ಸಹಾಯವೂ ಇಲ್ಲದೆ ತನ್ನಷ್ಟಕ್ಕೆ ತಾನೇ ಎದ್ದು ಓಡಾಡುತ್ತಿದ್ದಾಳೆ.&lt;/p&gt;&lt;p&gt;ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಸಿಗದ ಗುಣಮುಖ, ರಾಯರ ಮಂತ್ರಾಕ್ಷತೆಯ ಮಹಿಮೆಯಿಂದ ಸಿಕ್ಕಿದೆ ಎಂದು ನಿವೇದಿತಾ ಕುಟುಂಬಸ್ಥರು ಭಾವುಕರಾಗಿದ್ದಾರೆ. ವಿಷಯ ತಿಳಿದ ಸುಭುದೇಂದ್ರ ತೀರ್ಥ ಸ್ವಾಮೀಜಿಗಳು ಮಂತ್ರಾಲಯಕ್ಕೆ ಬನ್ನಿ, ರಾಯರು ನಿಮ್ಮನ್ನು ಚೆನ್ನಾಗಿ ಇಡುತ್ತಾರೆ ಎಂದು ಹರಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಬೆಳೆದರೂ, ಮನುಷ್ಯನ ತರ್ಕಕ್ಕೆ ನಿಲುಕದ ಶಕ್ತಿಯೊಂದು ಈ ಜಗತ್ತನ್ನು ನಡೆಸುತ್ತಿದೆ ಎಂಬುದಕ್ಕೆ ಹಾವೇರಿಯ ಈ ಘಟನೆಯೇ ಸಾಕ್ಷಿ. ನಿವೇದಿತಾ ಇಂದು ಸುಧಾರಿಸಿಕೊಂಡು ಮತ್ತೆ ತನ್ನ ವೈದ್ಯಕೀಯ ಶಿಕ್ಷಣದತ್ತ ಮುಖ ಮಾಡಿರುವುದು ರಾಯರ ಭಕ್ತರಲ್ಲಿ ಸಂತಸ ಮೂಡಿಸಿದೆ.&lt;/p&gt;]]></content:encoded>
            <category>haveri</category>
            <dc:creator>Ganesh Mabla Gowda</dc:creator>
            <atom:link href="https://kannada.asianetnews.com/haveri/the-miracle-of-guru-raghavendra-wheelchair-bound-mbbs-student-walks-again-after-battling-rare-disease-gkn/articleshow-mybehp6"/>
        </item>
        <item>
            <title><![CDATA[ಮಳೆಯಿಲ್ಲದಿದ್ದರೂ ತುಂಬಿ ಹರಿಯುತ್ತಿರುವ ನದಿಗಳು; ಕೋಡಿ ಬಿದ್ದ ಮದಗ–ಮಾಸೂರು ಕೆರೆ]]></title>
            <link>https://kannada.asianetnews.com/karnataka-districts/monsoon-rain-varada-tungabhadra-dharma-and-kumadwati-rivers-are-in-full-flow-in-haveri-district-mrq/articleshow-oprxlbd</link>
            <guid isPermaLink="true">https://kannada.asianetnews.com/karnataka-districts/monsoon-rain-varada-tungabhadra-dharma-and-kumadwati-rivers-are-in-full-flow-in-haveri-district-mrq/articleshow-oprxlbd</guid>
            <pubDate>Sat, 08 Aug 2026 09:18:19 +0530</pubDate>
            <description><![CDATA[ಹಾವೇರಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಮಳೆ ಕೊರತೆ ಇದ್ದರೂ, ಮೇಲ್ಭಾಗದ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳು ತುಂಬಿ ಹರಿಯುತ್ತಿವೆ. ಈ ಬೆಳವಣಿಗೆಯು ರೈತರಲ್ಲಿ ಹೊಸ ಭರವಸೆ ಮೂಡಿಸಿದ್ದು, ರಟ್ಟಿಹಳ್ಳಿ ತಾಲೂಕಿನ ಮದಗ-ಮಾಸೂರು ಕೆರೆಯೂ ಕೋಡಿ ಬಿದ್ದಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kzfqjtwnd8zy8g7yrf309bh4,imgname-tungabhadra-river-1786160704405.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ: &lt;/strong&gt;ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಣನೀಯ ಮಳೆಯಾಗದಿದ್ದರೂ ಜಿಲ್ಲೆಯ ಪ್ರಮುಖ ನದಿಗಳಾದ ವರದಾ, ತುಂಗಭದ್ರಾ, ಧರ್ಮಾ ಹಾಗೂ ಕುಮದ್ವತಿ ನದಿಗಳು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ಸಂತಸ ಮೂಡಿಸಿದೆ.&lt;/p&gt;&lt;p&gt;ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿದ್ದರೂ, ನದಿಗಳ ಮೇಲ್ಭಾಗದ ಪ್ರದೇಶಗಳಲ್ಲಿ ಸುರಿದ ಮಳೆಯ ಪರಿಣಾಮವಾಗಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶ ಹಾಗೂ ಶಿವಮೊಗ್ಗ, ದಾವಣಗೆರೆ ಭಾಗಗಳಲ್ಲಿ ಸುರಿದ ನಿರಂತರ ಮಳೆ ನದಿಗಳಿಗೆ ಜೀವ ತುಂಬಿದೆ. ಅದರ ಪರಿಣಾಮವಾಗಿ ಜಿಲ್ಲೆಯ ಮೂಲಕ ಹರಿಯುವ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ನದಿ ತೀರದ ಗ್ರಾಮಗಳಲ್ಲಿ ಹಲವು ತಿಂಗಳ ಬಳಿಕ ಮತ್ತೆ ಜಲಧಾರೆ ಕಂಡು ರೈತರಲ್ಲಿ ಹೊಸ ಭರವಸೆ ಮೂಡಿದೆ.&lt;/p&gt;&lt;h2&gt;&lt;strong&gt;ಮುಳುಗಡೆಯಾದ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ&lt;/strong&gt;&lt;/h2&gt;&lt;p&gt;ಮುಂಗಾರು ಹಂಗಾಮಿನಲ್ಲಿ ಮಳೆಯಿಲ್ಲದೇ ಬೆಳೆ ಒಣಗುವ ಸ್ಥಿತಿಯಿಂದ ಕಂಗೆಟ್ಟಿದ್ದ ರೈತರಿಗೆ ಈ ಬೆಳವಣಿಗೆ ಆಶಾದಾಯಕವಾಗಿದೆ. ನದಿಗಳ ಹರಿವು ಹೆಚ್ಚಿದರೆ ಅಂತರ್ಜಲ ಮಟ್ಟ ಏರಿಕೆಯಾಗುವುದರ ಜೊತೆಗೆ ಕೆರೆ-ಕಟ್ಟೆಗಳಿಗೂ ನೀರು ಸೇರುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಪರಿಹಾರವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಜಲಾವೃತಗೊಂಡಿದ್ದ ಕಳಸೂರು ಸೇತುವೆ ಗುರುವಾರ ಸಂಚಾರಕ್ಕೆ ತೆರವಾಗಿದೆ. ತುಂಗಭದ್ರಾ ನದಿಯ ನೀರಿನ ಮಟ್ಟ ಏರಿದ್ದರಿಂದ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಮುಳುಗಿದೆ. ಇದು ಜಿಲ್ಲೆಯಲ್ಲಿ ಬರಿದಾಗಿರುವ ಕೆರೆಗಳನ್ನು ಭರ್ತಿ ಮಾಡಲು ಸಕಾಲವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಂಡು ಕೆರೆ ತುಂಬಿಸಲು ಕ್ರಮ ಕೈಗೊಳ್ಳಬೇಕಿದೆ.&lt;/p&gt;&lt;p&gt;ವರದಾ, ತುಂಗಭದ್ರಾ, ಧರ್ಮಾ ಹಾಗೂ ಕುಮದ್ವತಿ ನದಿಗಳ ಉಕ್ಕಿ ಹರಿಯುವ ದೃಶ್ಯವನ್ನು ವೀಕ್ಷಿಸಲು ಜನರು ಸೇತುವೆಗಳು ಮತ್ತು ನದಿ ತೀರಗಳಿಗೆ ಆಗಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಈ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ.&lt;/p&gt;&lt;p&gt;ಆದರೆ ನದಿಗಳಲ್ಲಿ ಹರಿವು ಹೆಚ್ಚಿರುವ ಕಾರಣ ಜನರು ಅನಗತ್ಯವಾಗಿ ನೀರಿಗೆ ಇಳಿಯದಂತೆ ಹಾಗೂ ಸೇತುವೆಗಳ ಮೇಲೆ ಅಪಾಯಕಾರಿಯಾಗಿ ನಿಂತು ಛಾಯಾಚಿತ್ರ ಅಥವಾ ಸೆಲ್ಫಿ ತೆಗೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಪೋಷಕರು ಮಕ್ಕಳ ಮೇಲೆ ವಿಶೇಷ ನಿಗಾ ವಹಿಸುವ ಅಗತ್ಯವೂ ಇದೆ.&lt;/p&gt;&lt;h3&gt;&lt;strong&gt;ಕೋಡಿ ಬಿದ್ದ ಮದಗ&ndash;ಮಾಸೂರು ಕೆರೆ&lt;/strong&gt;&lt;/h3&gt;&lt;p&gt;ಇತ್ತೀಚಿನ ಮಳೆಯ ಪರಿಣಾಮ ರಟ್ಟಿಹಳ್ಳಿ ತಾಲೂಕಿನ ಪ್ರಮುಖ ಜಲಮೂಲವಾಗಿರುವ ಮದಗ&ndash;ಮಾಸೂರು ಕೆರೆ ತುಂಬಿ ಕೋಡಿ ಬಿದ್ದಿದೆ. ಕೆರೆಯ ಕೋಡಿ ಮೂಲಕ ನೀರು ಭೋರ್ಗರೆಯುತ್ತ ಹರಿಯುತ್ತಿರುವ ದೃಶ್ಯ ಮನಮೋಹಕವಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.&lt;/p&gt;&lt;p&gt;ಕಳೆದ ಕೆಲ ದಿನಗಳಿಂದ ಸುರಿದ ಮಳೆ ಹಾಗೂ ಕೆರೆ ವ್ಯಾಪ್ತಿಯಲ್ಲಿ ಹರಿದು ಬಂದ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕೆರೆ ಸಂಪೂರ್ಣ ಭರ್ತಿಯಾದ ಬಳಿಕ ಹೆಚ್ಚುವರಿ ನೀರು ಕೋಡಿ ಮೂಲಕ ಹೊರಹರಿಯುತ್ತಿದೆ. ನೀರು ರಭಸವಾಗಿ ಹರಿಯುವ ಜಲವೈಭವದ ದೃಶ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/monsoon-rain-varada-tungabhadra-dharma-and-kumadwati-rivers-are-in-full-flow-in-haveri-district-mrq/articleshow-oprxlbd"/>
        </item>
        <item>
            <title><![CDATA[Yashodhara Vaddar Death: ತರಬೇತಿ ವೇಳೆ ಗುಂಡು ತಗುಲಿ ಹಾನಗಲ್ಲ ಮೂಲದ ನೌಕಪಡೆಯ ಯೋಧ ಸಾವು]]></title>
            <link>https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y</link>
            <guid isPermaLink="true">https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y</guid>
            <pubDate>Sat, 04 Jul 2026 06:02:36 +0530</pubDate>
            <description><![CDATA[&lt;p&gt;Yashodhara Vaddar Death ಕೇರಳದ ಕೊಚ್ಚಿಯಲ್ಲಿ ನೌಕಾಪಡೆಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಯೋಧರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwn7wmj5nrzrjg5s7fcsxsgr,imgname-----------------------2026-07-04t054841.711-1783124349509.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾನಗಲ್ಲ(ಹಾವೇರಿ) (ಜು.4): &lt;/strong&gt;ಕೇರಳದ ಕೊಚ್ಚಿಯಲ್ಲಿ ನೌಕಾಪಡೆಯ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದ ಯೋಧರೊಬ್ಬರು ಗುಂಡು ತಗುಲಿ ಮೃತಪಟ್ಟಿದ್ದಾರೆ.&amp;nbsp;&lt;/p&gt;&lt;p&gt;ಯಶೋಧರ ವಡ್ಡರ (29)(Yashodhara Vaddar Death) ಮೃತ ಯೋಧ. ಅಂಡಮಾನ್&zwnj;ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಯಶೋಧರ ಕಳೆದ 3 ತಿಂಗಳಿನಿಂದ ಕೊಚ್ಚಿಯಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಾಗಿ ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿದ್ದರು. 2016ರಲ್ಲಿ ಭಾರತೀಯ ನೌಕಾಪಡೆಯ ಯೋಧರಾಗಿ ಯಶೋಧರ ನೇಮಕಗೊಂಡಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಮೌಂಟ್ ಎವರೆಸ್ಟ್&zwnj;ನಲ್ಲಿ ಯೋಧನ 'ಗ್ರೀನ್ ಬೂಟ್' ರಹಸ್ಯ ಬಯಲು; ಪರ್ವತಾರೋಹಿಗಳ ದಿಕ್ಸೂಚಿಗೆ 30 ವರ್ಷದ ಬಳಿಕ ಮುಕ್ತಿ!&lt;/p&gt;&lt;p&gt;ಕರ್ತವ್ಯ ನಿರ್ವಹಣೆ ವೇಳೆ ಯೋಧ ಯಶೋಧರ ಗುಂಡು ತಾಗಿ ಮೃತಪಟ್ಟಿದ್ದಾರೆ.ಉಪ್ಪುಣಸಿಗೆ ಯೋಧನ ಪಾರ್ಥೀವ ಶರೀರ ಶನಿವಾರ ಆಗಮಿಸಲಿದೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರಕ್ಕಾಗಿ ಎಲ್ಲ ಸಿದ್ಧತೆ ನಡೆದಿದೆ.&lt;/p&gt;]]></content:encoded>
            <category>haveri</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/yashodhara-vaddar-indian-navy-sailor-from-hanagal-dies-after-hit-by-bullet-during-training-rav/articleshow-rs4ob6y"/>
        </item>
        <item>
            <title><![CDATA[ಮಕ್ಕಳಿಂದ ಛೀಮಾರಿ: ಕೆಸರು ಗದ್ದೆಯಂತಹ ರಸ್ತೆಯಲ್ಲಿ ಭತ್ತ ನಾಟಿ ಮಾಡಿ 80ನೇ ಸ್ವಾತಂತ್ರ್ಯ ದಿನಾಚರಣೆ ಮಾಡಿದ ಮಕ್ಕಳು!]]></title>
            <link>https://kannada.asianetnews.com/karnataka-districts/haveri-80th-independence-day-school-children-protest-muddy-road-planting-paddy/articleshow-tfl6gho</link>
            <guid isPermaLink="true">https://kannada.asianetnews.com/karnataka-districts/haveri-80th-independence-day-school-children-protest-muddy-road-planting-paddy/articleshow-tfl6gho</guid>
            <pubDate>Sat, 15 Aug 2026 11:04:25 +0530</pubDate>
            <description><![CDATA[&lt;p&gt;ಹಾವೇರಿ ಜಿಲ್ಲೆಯ ಹಳ್ಳಿಯೊಂದರಲ್ಲಿ, 80ನೇ ಸ್ವಾತಂತ್ರ್ಯ ದಿನದಂದೇ ಶಾಲಾ ಮಕ್ಕಳು ಮೂಲಸೌಕರ್ಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಶಾಲೆಗೆ ಹೋಗುವ ರಸ್ತೆ ಕೆಸರು ಗದ್ದೆಯಂತಾಗಿದ್ದರಿಂದ ಆಕ್ರೋಶಗೊಂಡ ಮಕ್ಕಳು, ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01m01yc384d3knt96t1ajgbde4,imgname-haveri-independence-day-paddy-cultivation-1786771803395.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹಾವೇರಿ (ಆ.15): ದೇ&lt;/strong&gt;ಶದೆಲ್ಲೆಡೆ 2026ರ 80ನೇ ಸ್ವಾತಂತ್ರ್ಯ ದಿನಾಚರಣೆಯ (80th Independence Day) ಸಡಗರ ಮನೆಮಾಡಿದ್ದರೆ, ಹಾವೇರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶಾಲಾ ಮಕ್ಕಳು ಮೂಲಸೌಕರ್ಯಕ್ಕಾಗಿ ಸ್ವಾತಂತ್ರ್ಯ ದಿನದಂದೇ ರಸ್ತೆಗಿಳಿದು ಕಣ್ಣೀರು ಹಾಕಿದ ಮನಕಲಕುವ ಘಟನೆ ನಡೆದಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 8 ದಶಕಗಳು ಕಳೆದರೂ ಶಾಲೆಗೆ ಹೋಗಲು ಸಮರ್ಪಕ ರಸ್ತೆಯಿಲ್ಲ ಎಂದು ಆಕ್ರೋಶಗೊಂಡ ಪುಟಾಣಿ ಮಕ್ಕಳು, ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಆಡಳಿತ ವ್ಯವಸ್ಥೆಗೆ ಛೀಮಾರಿ ಹಾಕಿದ್ದಾರೆ.&lt;/p&gt;&lt;h2&gt;&lt;strong&gt;ಎಲ್ಲಿ ನಡೆದಿದೆ ಘಟನೆ?&lt;/strong&gt;&lt;/h2&gt;&lt;p&gt;ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಎಚ್. ಆರೇಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸಂಪೂರ್ಣ ಕೆಸರು ಗದ್ದೆಯಂತಾಗಿದೆ.&lt;/p&gt;&lt;h2&gt;&lt;strong&gt;80ನೇ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಅಡ್ಡಿ:&lt;/strong&gt;&lt;/h2&gt;&lt;p&gt;ಆಗಸ್ಟ್ 15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದಲ್ಲಿ ಭಾಗಿಯಾಗಲು ಮಕ್ಕಳು ಶುಭ್ರವಾದ ಸಮವಸ್ತ್ರ ಧರಿಸಿ ಶಾಲೆ ಮತ್ತು ಅಂಗನವಾಡಿಗೆ ಹೊರಟಿದ್ದರು. ಆದರೆ, ಮಾರ್ಗಮಧ್ಯೆ ರಸ್ತೆಯುದ್ದಕ್ಕೂ ಮೊಣಕಾಲುದ್ದ ಕೆಸರು ತುಂಬಿದ್ದರಿಂದ ಮಕ್ಕಳು ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಇದರಿಂದ ತೀವ್ರ ನಿರಾಶೆ ಹಾಗೂ ಆಕ್ರೋಶಗೊಂಡ ಮಕ್ಕಳು, ಕೈಯಲ್ಲಿ ಭತ್ತದ ಸಸಿಗಳನ್ನು ಹಿಡಿದು ಕೆಸರು ರಸ್ತೆಯಲ್ಲೇ ನಾಟಿ ಮಾಡುವ ಮೂಲಕ '80 ವರ್ಷಗಳ ಸ್ವಾತಂತ್ರ್ಯದ ನಂತರವೂ ನಮ್ಮ ಹಳ್ಳಿಯ ದುಸ್ಥಿತಿ ಇದೇನಾ?' ಎಂದು ಪ್ರಶ್ನಿಸಿ ವಿನೂತನ ಪ್ರತಿಭಟನೆ ನಡೆಸಿದರು.&lt;/p&gt;&lt;h2&gt;&lt;strong&gt;ದಿನವೂ ಜಾರಿ ಬೀಳುತ್ತಿರುವ ಪುಟಾಣಿ ಕಂದಮ್ಮಗಳು:&lt;/strong&gt;&lt;/h2&gt;&lt;p&gt;&lt;strong&gt;ನಿತ್ಯವೂ ಗಾಯ: &lt;/strong&gt;ಅಂಗನವಾಡಿ ಕಂದಮ್ಮಗಳು ಹಾಗೂ ಪ್ರಾಥಮಿಕ ಶಾಲಾ ಮಕ್ಕಳು ಇದೇ ಕೆಸರು ರಸ್ತೆಯಲ್ಲಿ ನಿತ್ಯವೂ ನಡೆದುಕೊಂಡು ಹೋಗಬೇಕು. ದಿನಕ್ಕೆ ಕನಿಷ್ಠ ಒಬ್ಬರಾದರೂ ಜಾರಿ ಬಿದ್ದು ಗಾಯಗೊಳ್ಳುತ್ತಿದ್ದಾರೆ.&lt;/p&gt;&lt;p&gt;&lt;strong&gt;ಬಟ್ಟೆ, ಬ್ಯಾಗ್ ಕೆಸರುಮಯ: &lt;/strong&gt;ಶಾಲೆಗೆ ಹೋಗುವ ಮುನ್ನವೇ ಸಮವಸ್ತ್ರ ಮತ್ತು ಪುಸ್ತಕದ ಚೀಲಗಳು ಕೆಸರು ಪಾಲಾಗುತ್ತಿವೆ.&lt;/p&gt;&lt;p&gt;&lt;strong&gt;ಜನಪ್ರತಿನಿಧಿಗಳಿಗೆ ಮುಖಭಂಗ: &lt;/strong&gt;ರಸ್ತೆ ಅತಿಯಾಗಿ ಹದಗೆಟ್ಟಿರುವ ಕಾರಣ, ಸ್ವಾತಂತ್ರ್ಯ ದಿನದ ಧ್ವಜಾರೋಹಣಕ್ಕೆ ಬರಲು ಸ್ಥಳೀಯ ಜನಪ್ರತಿನಿಧಿಗಳೇ ಈ ರಸ್ತೆಯಲ್ಲಿ ಸಂಚರಿಸಲು ಹಿಂದೇಟು ಹಾಕಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ತುಪ್ಪ ಸುರಿದಿದೆ.&lt;/p&gt;&lt;h2&gt;&lt;strong&gt;ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ:&lt;/strong&gt;&lt;/h2&gt;&lt;p&gt;'ದೇಶವು 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಕಾಲಘಟ್ಟದಲ್ಲೂ ನಮ್ಮ ಮಕ್ಕಳಿಗೆ ಶಾಲೆಗೆ ಹೋಗಲು ಒಂದು ಸುಸಜ್ಜಿತ ರಸ್ತೆ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಹಲವು ಬಾರಿ ಮನವಿ ಸಲ್ಲಿಸಿದರೂ ಶಾಸಕರು, ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಕಣ್ಣು ಮುಚ್ಚಿ ಕುಳಿತಿದೆ' ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕೂಡಲೇ ಈ ರಸ್ತೆಯನ್ನು ಡಾಂಬರೀಕರಣ ಅಥವಾ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.&lt;/p&gt;]]></content:encoded>
            <category>haveri</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/haveri-80th-independence-day-school-children-protest-muddy-road-planting-paddy/articleshow-tfl6gho"/>
        </item>
    </channel>
</rss>
